Baddi manna-ಈ 2 ಬ್ಯಾಂಕ್ ಗಳಲ್ಲಿ ಸಾಲ ಮಾಡಿದವರಿಗೆ ಬಡ್ಡಿ ಮನ್ನಾ ಘೋಷಿಸಿದ ಸಿಎಂ ಸಿದ್ದರಾಮಯ್ಯ
<Krushirushi> <3% ಬಡ್ಡಿ ಮನ್ನಾ> <interest subsidy> <ಕೃಷಿ ಮೂಲಭೂತ ಸೌಕರ್ಯ> <ಕೃಷಿ ಮೂಲಭೂತ ಸೌಕರ್ಯ> <AIF> <Agriculture Infrastructure fund> <Agricultureinfrastructurefund> <Krushi mulabutha soukarya yojane> <PMFME> <ACABC> <PMEGP> <NLM> <NHB>

Baddi manna-ಈ 2 ಬ್ಯಾಂಕ್ ಗಳಲ್ಲಿ ಸಾಲ ಮಾಡಿದವರಿಗೆ ಬಡ್ಡಿ ಮನ್ನಾ ಘೋಷಿಸಿದ ಸಿಎಂ ಸಿದ್ದರಾಮಯ್ಯ
2025-26ರ ರಾಜ್ಯ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ರೈತರಿಗೆ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ. ಕೃಷಿ ಇಲಾಖೆಗೆ ಹೆಚ್ಚಿನ ಮಹತ್ವ ನೀಡುವುದರ ಜೊತೆಗೆ ಈ ಎರಡು ಬ್ಯಾಂಕ್ಗಳಲ್ಲಿ ರೈತರು ಸಾಲ ಮಾಡಿದ್ರೆ ಬಡ್ಡಿ ಮನ್ನಾ ಮಾಡಲಾಗಿದೆ.
2025-26ರ ದಾಖಲೆಯ ಬಂಜೆಟ್ (State Budget0 ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ರೈತರಿಗೆ ಬಂಪರ್ ಗಿಫ್ಟ್ (Special Gift to Farmers) ಕೊಟ್ಟಿದ್ದಾರೆ. ಈ ಬಜೆಟ್ನಲ್ಲಿ ಕೃಷಿ ಇಲಾಖೆಗೆ ಹೆಚ್ಚಿನ ಮಹತ್ವ ನೀಡಿರುವ ‘ರೈತ’ರಾಮಯ್ಯ ರೈತರ ಸಾಲದ (Loan) ಬಡ್ಡಿ ಮನ್ನಾ (Interest waived) ಮಾಡುವಂತೆ ಘೋಷಿಸಿದ್ದಾರೆ. ಈ ಎರಡು ಬ್ಯಾಂಕ್ಗಳಲ್ಲಿ ರೈತರು ಸಾಲ ಮಾಡಿದ್ದರೆ, ಅವರ ಬಡ್ಡಿ ಮನ್ನಾ ಆಗಲಿದೆ.
ಡಿಸಿಸಿ (DCC), ಪಿಕಾರ್ಡ್ ಬ್ಯಾಂಕ್ಗಳಲ್ಲಿ (Picard Bank) ಸಾಲ ಮಾಡಿರುವ ರೈತರು ಈಗ ಬಡ್ಡಿ ಕಟ್ಟುವ ಹಾಗಿಲ್ಲ. ಈ ಎರಡು ಬ್ಯಾಂಕ್ಗಳಲ್ಲಿ ರೈತರ ಸಾಲದ ಬಡ್ಡಿ ಮನ್ನಾ ಮಾಡಲಾಗಿದೆ. 2 ಬ್ಯಾಂಕ್ಗಳಲ್ಲಿ ರೈತರ ಸಾಲದ ಬರೋಬ್ಬರಿ ₹240 ಕೋಟಿ ಬಡ್ಡಿ ಮನ್ನಾ ಮಾಡಲಾಗಿದೆ. ಜೊತೆಗೆ 37 ಲಕ್ಷ ರೈತರಿಗೆ ಸಾಲಕ್ಕಾಗಿ ₹28,000 ಕೋಟಿ ಘೋಷಿಸಲಾಗಿದೆ.
Bele sala baddi manna-ಈ ಯೋಜನೆಯಡಿ ಸಿಗಲಿದೆ ನಿಮ್ಮ ಸಾಲದ ಮೇಲೆ 3% ಬಡ್ಡಿ ಮನ್ನಾ,ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ಕೇಂದ್ರ ವಲಯದ ಯೋಜನೆ ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಸರ್ಕಾರವು ಹಣಕಾಸು ಸೌಲಭ್ಯಗಳನ್ನು ಒದಗಿಸುತ್ತಿದ್ದು, ರೂ. 2 ಕೋಟಿ ಸಾಲದ ಮೊತ್ತಕ್ಕೆ ವಾರ್ಷಿಕ ಶೇ. 3ರಂತೆ 7 ವರ್ಷದ ಅವಧಿಗೆ ಬಡ್ಡಿ ಸಹಾಯಧನ ಲಭ್ಯವಿರುತ್ತದೆ.
ಅರ್ಹ ಕೃಷಿ ಚಟುವಟಿಕೆಗಳು/ಯೋಜನೆಗಳು ಈ ಕೆಳಗಿನಂತಿವೆ
ಇ-ಮಾರುಕಟ್ಟೆ ವೇದಿಕೆ ಸೇರಿದಂತೆ ಸರಬರಾಜು ಸರಪಳಿ ಸೇವೆಗಳು ಗೋದಾಮುಗಳು ಮತ್ತು ಸೈಲೊಗಳು + ಪ್ಯಾಕ್ ಹೌಸ್ಗಳು ವಿಂಗಡಣೆ ಮತ್ತು ಶ್ರೇಣೀಕರಣ ಘಟಕಗಳು ಶೀತಲಗೃಹ ಸರಪಳಿಗಳು ಸಾಗಾಣಿಕೆ ಸೌಲಭ್ಯಗಳು ಪ್ರಾಥಮಿಕ ಸಂಸ್ಕರಣಾ ಕೇಂದ್ರಗಳು ಹಣ್ಣು ಮಾಗಿಸುವ ಘಟಕಗಳು
ಮೌಲ್ಯಮಾಪನ ಘಟಕಗಳು ಸಂಕುಚಿತ ಜೈವಿಕ ಅನಿಲ (CBG) ಸ್ಥಾವರ + ಸಾವಯವ ಪರಿಕರ ಉತ್ಪಾದನೆ + ಜೈವಿಕ ಉತ್ತೇಜಕ ಉತ್ಪಾದನಾ ಘಟಕಗಳು * ಸಸ್ಯ ನರ್ಸರಿ /ಅಂಗಾಂಶ ಕೃಷಿ ಬೀಜ ಸಂಸ್ಕರಣೆ + ಕೃಷಿ ಯಂತ್ರಧಾರೆ ಕೇಂದ್ರಗಳು ಸ್ಮಾರ್ಟ್ ಮತ್ತು ನಿಖರವಾದ ಕೃಷಿ ಸಂಯೋಜಿತ ಸ್ಪಿರುಲಿನಾ ಉತ್ಪಾದನೆ ಮತ್ತು ಸಂಸ್ಕರಣಾ ಘಟಕಗಳು ರೇಷ್ಮೆ ಕೃಷಿ ಸಂಸ್ಕರಣಾ ಘಟಕ • ಜೇನು ಸಂಸ್ಕರಣಾ ಘಟಕ ಪ್ಲಾಂಟ್ ಕ್ಯಾರಂಟೈನ್ ಘಟಕಗಳು ಮತ್ತು ಸಾಮೂಹಿಕ ಕೃಷಿ ಅಡಿ: ಜಲಕೃಷಿ, ವಾಯುಕೃಷಿ, ಹಸಿರುಮನೆ, ಬಹುಮಹಡಿ ಕೃಷಿ, ಅಣಬೆ ಬೇಸಾಯ
ಅರ್ಹ ಫಲಾನುಭವಿಗಳು
ರೈತರು/ ರೈತ ಉತ್ಪಾದಕ ಸಂಸ್ಥೆಗಳು, ಪ್ರಾಂತೀಯ ಸಹಕಾರ ಒಕ್ಕೂಟಗಳು ಕೃಷಿ ಉದ್ಯಮಿಗಳು / ನವೋದ್ಯಮಿಗಳು ಪ್ರಾಥಮಿಕ ಕೃಷಿ ಕ್ರೆಡಿಟ್ ಸಹಕಾರ ಸಂಘಗಳು + ವಿವಿಧೋದ್ದೇಶ ಸಹಕಾರ ಸಂಘಗಳು * ಸ್ವ-ಸಹಾಯ ಗುಂಪುಗಳು / ಜಂಟಿ ಬಾಧ್ಯತಾ ಗುಂಪುಗಳು / ಖಾಸಗಿ ಮಾಲೀಕತ್ವ ಸಂಸ್ಥೆಗಳು.
ಯೋಜನೆಯಲ್ಲಿ ಭಾಗವಹಿಸುವ ಹಣಕಾಸು ಸಂಸ್ಥೆಗಳು:
ರಾಷ್ಟ್ರೀಕೃತ ಬ್ಯಾಂಕುಗಳು + ಶೆಡ್ಯೂಲ್ಡ್ ಸಹಕಾರಿ ಬ್ಯಾಂಕ್ ಗಳು + ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು ಸಣ್ಣ ಹಣಕಾಸು ಬ್ಯಾಂಕುಗಳು + ಬ್ಯಾಂಕೇತರ ಹಣಕಾಸು ಸಂಸ್ಥೆಗಳು + ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (ಎನ್ ಸಿಡಿಸಿ).
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಮೊದಲು ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
CPMU, ಕೃಷಿ ಮತ್ತು ರೈ ಕಲ್ಯಾಣ ಮಂತ್ರಾಲಯದ ಮೂಲಕ ಪರಿಶೀಲಿಸಲಾದ ಅರ್ಜಿಯನ್ನು ಬ್ಯಾಂಕ್ ಶಾಖೆಗೆ ಆನ್ ಲೈನ್ ನಲ್ಲಿ ವರ್ಗಾಯಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕೃಷಿ/ತೋಟಗಾರಿಕೆ ಇಲಾಖೆ, ಜಿಲ್ಲಾ ನಬಾರ್ಡ್ ವ್ಯವಸ್ಥಾಪಕರು, ನಿಮ್ಮ ವ್ಯಾಪ್ತಿಯ ಬ್ಯಾಂಕ್/ ಹಣಕಾಸು ಸಂಸ್ಥೆಗಳನ್ನು ಸಂಪರ್ಕಿಸಬಹುದು.