Bele vime-ವಾರದೊಳಗೆ ಬೆಳೆ ವಿಮೆ ಪರಿಹಾರ-ಕೃಷಿ ಸಚಿವ ಚೆಲುವರಾಯಸ್ವಾಮಿ
Bele vime-ವಾರದೊಳಗೆ ಬೆಳೆ ವಿಮೆ ಪರಿಹಾರ-ಕೃಷಿ ಸಚಿವ ಚೆಲುವರಾಯಸ್ವಾಮಿ

Bele vime-ವಾರದೊಳಗೆ ಬೆಳೆ ವಿಮೆ ಪರಿಹಾರ-ಕೃಷಿ ಸಚಿವ ಚೆಲುವರಾಯಸ್ವಾಮಿ
ವಾರದಲ್ಲಿ ವಿಮೆ ಹಣ ಜಮಾ: 'ಬೆಳೆ ವಿಮೆ'
ಪರಿಹಾರ ಮೊತ್ತ ವಿಳಂಬವಾಗುತ್ತಿರುವುದಕ್ಕೆ ಹೆಚ್ಚಿನ ಕರೆಗಳ ಬಂದವು. ರಾಣೆಬೆನ್ನೂರು ತಾಲೂಕಿನ ಜೋಯಿಸರ ಹಳ್ಳಿಯ ಶಂಕರಪ್ಪ ರಾಮಪ್ಪ, ಕಲಬುರಗಿಯ ಬಾಬು ಸಾಬ್ ಪಾಟೀಲ್, ಶಿರಾ ತಾಲೂಕಿನ ತಿಮ್ಮರಾಜು, ವಿಜಯಪುರದ ಹನುಮಂತ, ರಾಯಚೂರು ಮಾನ್ವಿ ತಾಲೂಕಿನ ಮಿರಾಜುದ್ದೀನ್, ಗೌರಿಬಿದನೂರು ತಾಲೂಕಿನ ಸತೀಶ್ ಸೇರಿದಂತೆ ಇನ್ನೂ ಕೆಲವರು ಪ್ರಸ್ತಾಪಿಸಿದ ಬೆಳೆ ವಿಮೆ ಸೂಕ್ತ ಸಮಯಕ್ಕೆ ಬಾರದಿರುವ ವಿಚಾರಕ್ಕೆ ಸಚಿವರು ಸ್ಪಂದಿಸಿದರು.
"ಸಮೀಕ್ಷೆ ನಡೆಸಿ ಬೆಳೆ ಹಾನಿಯಾಗಿರುವುದು ಖಾತರಿಯಾಗಷ್ಟೇ ಬೆಳೆ ವಿಮೆ ಪರಿಹಾರ ನೀಡಲಾಗುತ್ತದೆ. ಈಗಾಗಲೇ ಬೆಳೆ ವಿಮೆ ಹಣ ರೈತರ ಖಾತೆಗೆ ಜಮೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕಳೆದ ವರ್ಷದ ಬೆಳೆ ವಿಮೆ ಪರಿಹಾರ ವಾರರೊಳಗೆ ರೈತರ ಖಾತೆಗೆ ಜಮೆಯಾಗಲಿದೆ. ಕಲಬುರಗಿಯಲ್ಲಿ ಕಳೆದ ಅಕ್ಟೋಬರ್-ನವೆಂಬರ್ ನಲ್ಲಿ ಆದ ಬೆಳೆಹಾನಿಗೆ 600 ಕೋಟಿ ಪರಿಹಾರ ನೀಡಲಾಗಿದೆ ಎಂದು ಹೇಳಿದರು.
ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.