Heavy rain alert-9 ಜಿಲ್ಲೆಗಳಿಗೆ ರೆಡ್ ಅಲರ್ಟ್,5 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Heavy rain alert-9 ಜಿಲ್ಲೆಗಳಿಗೆ ರೆಡ್ ಅಲರ್ಟ್,5 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Heavy rain alert-9 ಜಿಲ್ಲೆಗಳಿಗೆ ರೆಡ್ ಅಲರ್ಟ್,5 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ 9 ಜಿಲ್ಲೆಗಳಿಗೆ ರೆಡ್ ಅಲರ್ಟ್ಘೋಷಿಸಲಾಗಿದ್ದು, ಐದು ಜಿಲ್ಲೆಗಳಲ್ಲಿ ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಸೈಕ್ಲೋನ್ಗೆ ಕಾರಣವಾಗಿದ್ದು, ಸಮುದ್ರದಲ್ಲಿ 5.8 ರಿಂದ 8 ಅಡಿ ಎತ್ತರದ ಸುಳಿಗಾಳಿ ಬೀಸುತ್ತಿದೆ. ಈ ಸೈಕ್ಲೋನ್ ಪರಿಣಾಮದಿಂದ ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಕಾರಣದಿಂದಾಗಿ ರಾಜ್ಯದ 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ಚಿಕ್ಕಮಗಳೂರು
ಕೊಡಗು
ಹಾಸನ
ಮೈಸೂರು
ಚಾಮರಾಜನಗರ
ಭಾರೀ ಮಳೆಯ ಹಿನ್ನೆಲೆಯಲ್ಲಿ ಐದು ಜಿಲ್ಲೆಗಳಾದ ಧಾರವಾಡ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ಮತ್ತು ಕೊಡಗು ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ, ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ರಾಜ್ಯದ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ:
ಬಾಗಲಕೋಟೆ
ಗದಗ
ವಿಜಯಪುರ
ದಾವಣಗೆರೆ
ಹಾಸನ
ಮೈಸೂರು
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಇತರ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂಗಾರು ಮಳೆ ಜೋರಾಗಿ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ರಸ್ತೆ ಸಂಚಾರದಲ್ಲಿ ಜನರು ತೊಂದರೆ ಎದುರಿಸುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವು ಸೈಕ್ಲೋನ್ ರೂಪ ತಾಳಿದ್ದು, ದಿನದಿಂದ ದಿನಕ್ಕೆ ಇದರ ತೀವ್ರತೆ ಹೆಚ್ಚುತ್ತಿದೆ. ಆಂಧ್ರ ಪ್ರದೇಶದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮ ಕರ್ನಾಟಕದ ಕರಾವಳಿ ಭಾಗಗಳ ಮೇಲೂ ಬೀಳಲಿದೆ.
ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಜಾಗರೂಕರಾಗಿರಿ.
ಅಗತ್ಯವಿದ್ದರೆ ತುರ್ತು ಸಂಖ್ಯೆಗಳಾದ 1077 ಗೆ ಸಂಪರ್ಕಿಸಿ.
ಸಮುದ್ರ ತೀರಕ್ಕೆ ಭೇಟಿ ನೀಡದಿರಿ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹೆಚ್ಚಿರುವ ಮುನ್ಸೂಚನೆ ಇದೆ.
ಈಗಿನಂತೆ ಮುಂಗಾರು ಮೋಡಗಳ ಚಲನೆಯು ಸಾಂಪ್ರದಾಯಿಕ ಹಾದಿಗೆ ಮರಳುತ್ತಿದ್ದರೂ, ಮುನ್ಸೂಚನೆಯಲ್ಲಿರುವಷ್ಟು ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಜೂನ್ 18ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.
ಮಲೆನಾಡು : ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದೆ. ಒಂದೆರಡು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆಯೂ ಇದೆ. ಹಾಸನ ಸಾಮಾನ್ಯ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಜೂನ್ 15ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಜಾಸ್ತಿ ಇರಬಹುದು. ಜೂನ್ 18ರಿಂದ ತುಂತುರು ಮಳೆಯ ಮುನ್ಸೂಚೆನೆ ಇದೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಉತ್ತಮ ಹಾಗೂ ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಜೂನ್ 15ರಿಂದ ಮಳೆಯ ಪ್ರಮಾಣ ಕಡಿಮೆಯಾಗಿ ಜೂನ್ 19ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.