Karnataka Mansoon-16 ವರ್ಷಗಳ ನಂತರ 3 ದಿನ ಮೊದಲೇ ಮುಂಗಾರು ಪ್ರವೇಶ,ಈ ಭಾರಿಯ ಮಳೆ ಬೆಳೆ ಹೇಗಿರಲಿದೆ?

<ಜೂನ್ 1 ರ ಸಾಮಾನ್ಯ ದಿನಾಂಕಕ್ಕಿಂತ ಮುಂಚಿತವಾಗಿ, ಅಂದರೆ ಮೇ 27 ರಂದು ನೈಋತ್ಯ ಮಾನ್ಸೂನ್<Karnataka mansoon> ಕೇರಳವನ್ನು ತಲುಪುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ>

Karnataka Mansoon-16 ವರ್ಷಗಳ ನಂತರ 3 ದಿನ ಮೊದಲೇ ಮುಂಗಾರು ಪ್ರವೇಶ,ಈ ಭಾರಿಯ ಮಳೆ ಬೆಳೆ ಹೇಗಿರಲಿದೆ?

Karnataka Mansoon-16 ವರ್ಷಗಳ ನಂತರ 3 ದಿನ ಮೊದಲೇ ಮುಂಗಾರು ಪ್ರವೇಶ,ಈ ಭಾರಿಯ ಮಳೆ ಬೆಳೆ ಹೇಗಿರಲಿದೆ?


ರಾಜ್ಯ ಕರಾವಳಿ ಭಾಗಕ್ಕೆ ಒಂದು ತಿಂಗಳೊಳಗೆ ಮುಂಗಾರು ಪ್ರವೇಶ ಪಡೆಯುವ ಸಾಧ್ಯತೆ ಇದ್ದು, ಈ ಬಾರಿ ವಾಡಿಕೆ ಅಥವಾ ವಾಡಿಕೆಗಿಂತ ಅಧಿಕ ಮಳೆ ನಿರೀಕ್ಷಿಸಲಾಗಿದೆ. 

ಕೇಂದ್ರ ಹವಾಮಾನ ಇಲಾಖೆ ರೈತರಿಗೆ ಸಿಹಿಸುದ್ದಿ ನೀಡಿದ್ದು, ಈ ಬಾರಿಯ ನೈಋತ್ಯ ಮುಂಗಾರು ಮಳೆ ಕೊಂಚ ಮುಂಚಿತವಾಗಿಯೇ ಆಗಮಿಸಲಿದೆ ಎಂದು ಮಾಹಿತಿ ನೀಡಿದೆ.

ಹೌದು.. ಈ ಕೇಂದ್ರ ಹವಾಮಾನ ಇಲಾಖೆ ಶನಿವಾರ ಮಾಹಿತಿ ನೀಡಿದ್ದು, ವಾಡಿಕೆಯಂತೆ ಕೇರಳಕ್ಕೆ ಜೂನ್ 1ರಂದು ಮಳೆ ಕಾಲಿಡುತ್ತದೆ. ಆದರೆ ಈ ಬಾರಿ ಮುಂಗಾರು ಮಾರುತಗಳು 4 ದಿನಗಳ ಕಾಲ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶ ಮಾಡಲಿದೆ ಎಂದು ಹೇಳಿದೆ.

ಜೂನ್ 1 ರ ಸಾಮಾನ್ಯ ದಿನಾಂಕಕ್ಕಿಂತ ಮುಂಚಿತವಾಗಿ, ಅಂದರೆ ಮೇ 27 ರಂದು ನೈಋತ್ಯ ಮಾನ್ಸೂನ್ ಕೇರಳವನ್ನು ತಲುಪುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಈ ಹಿಂದೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಏಪ್ರಿಲ್‌ನಲ್ಲಿ 2025 ರ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಸಂಚಿತ ಮಳೆಯನ್ನು ಮುನ್ಸೂಚನೆ ನೀಡಿತ್ತು, ಇದು ಭಾರತೀಯ ಉಪಖಂಡದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯೊಂದಿಗೆ ಸಂಬಂಧಿಸಿದ ಎಲ್ ನಿನೊ ಪರಿಸ್ಥಿತಿಗಳ ಸಾಧ್ಯತೆಯನ್ನು ತಳ್ಳಿಹಾಕಿತು.

ಇದನ್ನೂ ಓದಿ
Mansoon rain 2025-ಈ ಭಾರಿ ಮೇ 13ರಿಂದಲೇ ಮನ್ಸೂನ್ ಪ್ರಾರಂಭ,ಮುಂದಿನ 4 ತಿಂಗಳು 1000 ಮೀ.ಮೀ ಮಳೆ

16 ವರ್ಷಗಳಲ್ಲಿ ಇದೇ ಮೊದಲು

ನಿರೀಕ್ಷೆಯಂತೆ ಮಾನ್ಸೂನ್ ಕೇರಳಕ್ಕೆ ಆಗಮಿಸಿದರೆ, ಐಎಂಡಿ ದತ್ತಾಂಶದ ಪ್ರಕಾರ, 2009 ರಲ್ಲಿ ಮೇ 23 ರ ಬಳಿಕ ಇದೇ ಮೊದಲ ಬಾರಿಗೆ ಭಾರತದ ಮುಖ್ಯ ಭೂಭಾಗದಲ್ಲಿ ಮುಂಗಾರು ಮಾರುತಗಳು ಬೇಗನೆ ಪ್ರವೇಶ ಮಾಡುತ್ತಿವೆ.

ಸಾಮಾನ್ಯವಾಗಿ, ನೈಋತ್ಯ ಮಾನ್ಸೂನ್ ಜೂನ್ 1 ರ ವೇಳೆಗೆ ಕೇರಳದ ಮೇಲೆ ಪ್ರಾರಂಭವಾಗಲಿದೆ ಮತ್ತು ಬಳಿಕ ಜುಲೈ 8 ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಇದು ಸೆಪ್ಟೆಂಬರ್ 17 ರ ಸುಮಾರಿಗೆ ವಾಯುವ್ಯ ಭಾರತದಿಂದ ಹಿಮ್ಮೆಟ್ಟಲು ಪ್ರಾರಂಭಿಸುತ್ತದೆ ಮತ್ತು ಅಕ್ಟೋಬರ್ 15 ರ ವೇಳೆಗೆ ಸಂಪೂರ್ಣವಾಗಿ ಹಿಮ್ಮೆಟ್ಟುತ್ತದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜೂನ್ ನಿಂದ ಸೆಪ್ಟೆಂಬರ್ ವರೆಗೆ ನಾಲ್ಕು ತಿಂಗಳ ಮುಂಗಾರು ಋತುವಿನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿಯ ಸರಾಸರಿ 87 ಸೆಂ.ಮೀ. ಮಳೆಯ ಶೇ. 105 ರಷ್ಟು (ಶೇ. 5 ರಷ್ಟು ಮಾದರಿ ದೋಷದೊಂದಿಗೆ) ಸಂಚಿತ ಮಳೆಯಾಗಿದೆ" ಎಂದು ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ. ರವಿಚಂದ್ರನ್ ಹೇಳಿದ್ದಾರೆ.


ಕರಾವಳಿ ಭಾಗದಲ್ಲಿ ಈಗಾಗಲೇ ಉತ್ತಮ ಬೇಸಗೆ ಮಳೆ ಸುರಿಯುತ್ತಿದ್ದು, ಇದೇ ರೀತಿ ಮುಂದುವರೆದು ಮೇ ಅಂತ್ಯ ಅಥವಾ ಜೂನ್ ಮೊದಲ ವಾರ ಕೇರಳಕ್ಕೆ ಮುಂಗಾರು ಪ್ರವೇಶಿಸಿ ಕರ್ನಾಟಕ ಕರಾವಳಿ ತೀರಕ್ಕೆ ಆಗಮಿಸುವ ಸಾಧ್ಯತೆ ಇದೆ. ವಾಡಿಕೆ ಮುಂಗಾರಿಗೆ ಸಮರ್ಪಕ ವಾತಾವರಣ, ಗಾಳಿ, ಮೋಡಗಳು ಸೃಷ್ಟಿಯಾಗುತ್ತಿದ್ದು, ಪೂರ್ವ ಮುಂಗಾರು ಮಳೆ ಕೊನೆಗೊಳ್ಳುವ ಸಂದರ್ಭದಲ್ಲಿ ಮಾನ್ಸೂನ್ ಮಳೆ ತರುವ ಮೋಡಗಳು ಭೂ ಮಧ್ಯ ರೇಖೆಯ ಮುಖೇನ ಬಂದು ಬಾನಂಗಳದಲ್ಲಿ ಶೇಖರಣೆಯಾಗಲಿದೆ. ಇದರಿಂದಾಗಿ ಈ ವರ್ಷವೂ ವಾಡಿಕೆಗೂ ಅಧಿಕ ಮಳೆಯಾಗಬಹುದು.

ಕರಾವಳಿ ಭಾಗದಲ್ಲಿ ಐದು ವರ್ಷಗಳ ಬಳಿಕ 2024ರಲ್ಲಿ ದಾಖಲೆಯ ಮುಂಗಾರು ಮಳೆ ಸುರಿದಿತ್ತು. ಕಳೆದ ವರ್ಷ 3101 ໖.. 2 2 3736 ໖.. ಮಳೆಯಾಗಿತ್ತು. ದ.ಕ. ಜಿಲ್ಲೆಯಲ್ಲಿ ಶೇ.11, ಉಡುಪಿ ಜಿಲ್ಲೆಯಲ್ಲಿ ಶೇ.13 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.31ರಷ್ಟು ಮಳೆ ವಾಡಿಕೆಗಿಂತ ಅಧಿಕ ಸುರಿದಿದೆ. ಒಟ್ಟಾರೆ ಕರಾವಳಿ ಭಾಗದಲ್ಲಿ ಶೇ.20ರಷ್ಟು ಅಧಿಕ ಸುರಿದಿತ್ತು. 
ಪೂರ್ವ ಮುಂಗಾರಿಗೆ ವೇಗ 
ಈ ತಿಂಗಳಾಂತ್ಯಕ್ಕೆ ಪೂರ್ವ ಮುಂಗಾರು ಅವಧಿ ಪೂರ್ಣಗೊಳ್ಳುತ್ತಿದ್ದು, ಈಗಾಗಲೇ ವಾಡಿಕೆಗಿಂತ ಅಧಿಕ ಮಳೆ ಸುರಿದಿದೆ. ಮಾರ್ಚ್ ತಿಂಗಳಿನಿಂದ ಮೇ 8ರವರೆಗೆ ರಾಜ್ಯದ ದಕ್ಷಿಣ ಒಳನಾಡು (ಶೇ.43), ಉತ್ತರ ಒಳನಾಡು (ಶೇ.38), ಮಲೆನಾಡು (ಶೇ.44), ಕರಾವಳಿಯಲ್ಲಿ (ಶೇ.63) ರಷ್ಟು ಮಳೆ ಏರಿಕೆ ಕಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.72, ಉಡುಪಿ ಜಿಲ್ಲೆಯಲ್ಲಿ ಶೇ.77 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.49ರಷ್ಟು ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಅಧಿಕ ಸುರಿದಿದೆ. 

ಸದ್ಯದಲ್ಲೇ ಇನ್ನೊಂದು ವರದಿ 
ಉತ್ತಮ ಮಳೆ ಸುರಿಯುವ ಸಾಧ್ಯತೆಯನ್ನು ಕೆಲ ದಿನಗಳ ಹಿಂದೆ ವರದಿಯಲ್ಲಿ ಭಾರತೀಯ ಹವಾಮಾನ ಇಲಾಖೆಯು ತಿಳಿಸಿತ್ತು. ಅದರಲ್ಲಿ ವಾಡಿಕೆ ಅಥವಾ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆಯನ್ನು ಹೇಳಲಾಗಿತ್ತು. ಆದರೆ, ಈ ತಿಂಗಳಾಂತ್ಯಕ್ಕೆ ಮತ್ತೂಂದು ವರದಿಯನ್ನು ಐಎಂಡಿ ಬಿಡುಗಡೆಗೊಳಿಸಲಿದ್ದು, ಅದರಲ್ಲಿ ಪ್ರದೇಶಾವಾರು ಮಳೆ ವರದಿ ಅಂದಾಜು ತಿಳಿಯಬಹುದಾಗಿದೆ. 

ಕರಾವಳಿ ಸಹಿತ ರಾಜ್ಯದಲ್ಲಿ ಈ ಬಾರಿ ಉತ್ತಮ ಮುಂಗಾರು ಮಳೆ ಸುರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಹವಾಮಾನ ವಿಶ್ಲೇಷಣೆ ಬಿಡುಗಡೆ ಮಾಡಿದ್ದು, ಅದರಂತೆ ಈ ಬಾರಿಯ ಮುಂಗಾರು ಅವಧಿಯಲ್ಲಿ ವಾಡಿಕೆ ಅಥವಾ ವಾಡಿಕೆಗೂ ಅಧಿಕ ಮಳೆ ಸುರಿಯುವ ಸೂಚನೆ ನೀಡಿದೆ. 


ಡಾ| 
ರಾಜೇಗೌಡ,ಹವಾಮಾನ ತಜ್ಞರು,ಬೆಂಗಳೂರು