Karnataka rains-ಶನಿವಾರ,ಭಾನುವಾರ,ಸೋಮವಾರ ಈ 3 ದಿನ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ

Karnataka rains-ಶನಿವಾರ,ಭಾನುವಾರ,ಸೋಮವಾರ ಈ 3 ದಿನ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ

Karnataka rains-ಶನಿವಾರ,ಭಾನುವಾರ,ಸೋಮವಾರ ಈ 3 ದಿನ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ

Karnataka rains-ಶನಿವಾರ,ಭಾನುವಾರ,ಸೋಮವಾರ ಈ 3 ದಿನ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ

ಹಲವೆಡೆ ಭಾರಿ ಮಳೆ ಸಾಧ್ಯತೆ 
ಬೆಂಗಳೂರು: ರಾಜ್ಯದಾದ್ಯಂತ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೊ ಅಲರ್ಟ್ ಘೋಷಿಸಿದೆ. 

ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಯ ಹಲವೆಡೆ ಶನಿವಾರ, ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ತಿಳಿಸಿದೆ. 

ಬೆಂಗಳೂರು ನಗರ ಮತ್ತು ಗ್ರಾಮೀಣ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಗಾಳಿಯೊಂದಿಗೆ (40-50 ಕಿ.ಮೀ ) ಗುಡುಗು ಸಹಿತ ಮಳೆಯಾಗುವ ಸಂಭವ ಇದೆ.

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ತೀರ ಭಾಗಗಳಲ್ಲಿ ಅಲ್ಲಲ್ಲಿ ಮುಂಗಾರು ರೀತಿಯ ಮಳೆಯಾಗುತ್ತಿದ್ದು, ಮಧ್ಯಾಹ್ನ ನಂತರ, ಸಂಜೆ, ರಾತ್ರಿ ವೇಳೆ ಇತರ ಭಾಗಗಳಲ್ಲಿಯೂ ಗುಡುಗು ಸಹಿತ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. 

ಈಗಿನಂತೆ ಮುಂಗಾರು ರೀತಿಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿಅ ಸಂಜೆ, ರಾತ್ರಿ ಗುಡುಗು, ಸಿಡಿಲು ಸಹಿತ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಮೇ 17ರಂದು ಸ್ವಲ್ಪ ಮಟ್ಟಿಗೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾದರೂ ಮೇ 19ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ. 

 *ಮೇ 20ರ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಲಕ್ಷಣಗಳಿದ್ದು ಇದರಿಂದ ಮುಂಗಾರು ಆಗಮನ ವೇಗ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಮೇ 19ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ನಿರೀಕ್ಷೆ ಇದೆ.*

ರಾಜ್ಯದಲ್ಲಿ ಐದು ದಿನಗಳವರೆಗಿನ ಮಳೆ ಮುನ್ಸೂಚನೆಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ ಡಿಎಂಸಿ) ಬಿಡುಗಡೆ ಮಾಡಿದೆ. ಹವಾಮಾನ ಇಲಾಖೆಯು ನೀಡಿರುವ ಮಾಹಿತಿಯಡಿ ಸಿದ್ಧಪಡಿಸಲಾಗಿರುವ ಈ ಪ್ರಕಟಣೆಯಲ್ಲಿ ಮಾ. 15ರಿಂದ 19ರವರೆಗಿನ ಅವಧಿಯಲ್ಲಿ ಕರ್ನಾಟಕದ ಯಾವ ಭಾಗದಲ್ಲಿ ಮಳೆಯಾಗಲಿದೆ ಎಂಬುದರ ಸಂಕ್ಷಿಪ್ತ ವಿವರಣೆಯನ್ನು ನೀಡಲಾಗಿದೆ.

ಪ್ರಕಟಣೆಯಲ್ಲಿ, “ರಾಜ್ಯದಾದ್ಯಂತ ಒಣ ಹವೆಯಿರುವ ಸಾದ್ಯತೆಯಿದ್ದು, ಮಾರ್ಚ್ 16 ಮತ್ತು 17 ರಂದು ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಸಾಧಾರಣ ಮಳೆ, ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಹೆಚ್ಚಾಗಿರೋ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ’’ ಎಂದು ತಿಳಿಸಲಾಗಿದೆ.

ಹಾಗಾದರೆ ಎಲ್ಲೆಲ್ಲಿ ಮಳೆ?

ಪ್ರಕಟಣೆಯೊಂದಿಗೆ, ಮಳೆ ಬೀಳಬಹುದಾದ ಪ್ರದೇಶಗಳ ಜಿಲ್ಲಾವಾರು ಮ್ಯಾಪ್ ಬಿಡುಗಡೆ ಮಾಡಿರುವ ಕೆಎಸ್ಎನ್ ಡಿಎಂಸಿ, ಎಲ್ಲೆಲ್ಲಿ ಮಳೆ ಬೀಳಬಹುದು, ಉಷ್ಣಾಂಶ ಎಷ್ಟಿರಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದೆ. ಅದರಲ್ಲಿರುವಂತೆ, ಮಾ. 15 - 16ರ ನಡುವೆ, ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಸುಮಾರು 2.5 ಮಿ.ಮೀ.ನಿಂದ 7.5 ಮಿ.ಮೀ.ವರೆಗೆ ಮಳೆ ಸುರಿಯುವ ಸಾಧ್ಯತೆಗಳಿವೆ. ಇನ್ನು, ಹಾಸನ ಜಿಲ್ಲೆಯ ಪಶ್ಚಿಮ ಭಾಗ, ದಕ್ಷಿಣ ಕನ್ನಡ ಜಿಲ್ಲೆಯ ಪೂರ್ವ ಭಾಗ, ಚಿಕ್ಕಮಗಳೂರು ಜಿಲ್ಲೆಯ ದಕ್ಷಿಣ ಭಾಗಗಳಲ್ಲಿ ಶಿವಮೊಗ್ಗ ಜಿಲ್ಲೆಯ ಪೂರ್ವ, ಮಧ್ಯ ಹಾಗೂ ದಕ್ಷಿಣ ಭಾಗಗಳಲ್ಲಿ ಮಳೆಯಾಗಲಿದೆ. ಸೆ. 17-18ರಂದು ಹಾಸನದ ನೈಋತ್ಯ ದಿಕ್ಕಿನಲ್ಲಿ, ಹಾಸನ - ದಕ್ಷಿಣ ಕನ್ನಡದ ಗಡಿಭಾಗದ ಕೆಲವು ಹಳ್ಳಿಗಳಲ್ಲಿ ಮಳೆಯಾಗುತ್ತದೆ. ಅಲ್ಲಿ ಬಿಟ್ಟರೆ ಮತ್ತೆಲ್ಲೂ ಮಳೆಯಾಗುವುದಿಲ್ಲ. ಮಾ. 18-19ರವರೆಗೂ ಎಲ್ಲೂ ಮಳೆಯಾಗುವುದಿಲ್ಲ.

ಉಷ್ಣಾಂಶ ಹೇಗೆ?

ಮಾ. 15 - 16ರಂದು ರಾಜ್ಯಾದ್ಯಂತ ಉಷ್ಣಾಂಶ ಸಾಧಾರಣ ಮಟ್ಟದಲ್ಲಿರುತ್ತದೆ. ಕರಾವಳಿಯಲ್ಲಿ 32ರಿಂದ 34 ಡಿಗ್ರಿ ವರೆಗೆ ಬಿಸಿ ಏರಬಹುದು. ಉತ್ತರ ಕರ್ನಾಟಕದ ಅದರಲ್ಲೂ ವಿಶೇಷವಾಗಿ ಹೈದರಾಬಾದ್ ಕರ್ನಾಟಕದಲ್ಲಿ 36 ಡಿಗ್ರಿಯಿಂದ 40 ಡಿಗ್ರಿ ತಾಪಮಾನ ಇರಲಿದೆ. ಮಧ್ಯ ಕರ್ನಾಟಕದಲ್ಲಿ ಉತ್ತರದ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯನಗರ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ, 34ರಿಂದ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಮೈಸೂರು, ಬೆಂಗಳೂರು, ಬೆಂಗೆಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯದಲ್ಲಿ 34ರಿಂದ 36 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ. ಚಾಮರಾಜನಗರದಲ್ಲಿ 32ರಿಂದ 34 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಲಾಗಿದೆ.