Karnataka rains-ಜಿಲ್ಲಾವಾರು ಮಳೆ ಮಾಹಿತಿ,ಇನ್ನೂ ಎಷ್ಟು ದಿನ ಹೀಗೆ ಮುಂದುವರೆಯಲಿದೆ ಮಳೆ?
Karnataka rains-ಜಿಲ್ಲಾವಾರು ಮಳೆ ಮಾಹಿತಿ,ಇನ್ನೂ ಎಷ್ಟು ದಿನ ಹೀಗೆ ಮುಂದುವರೆಯಲಿದೆ ಮಳೆ?

Karnataka rains-ಜಿಲ್ಲಾವಾರು ಮಳೆ ಮಾಹಿತಿ,ಇನ್ನೂ ಎಷ್ಟು ದಿನ ಹೀಗೆ ಮುಂದುವರೆಯಲಿದೆ ಮಳೆ?
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಉತ್ತರ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮುಂಗಾರು ಮಾರುತಗಳ ನೈಜ ಸ್ವರೂಪ ನಿನ್ನೆಯಿಂದ ಕರಾವಳಿ ಭಾಗಗಳಲ್ಲಿ ತೋರುತ್ತಿದೆ. ಜೂನ್ 14ರಿಂದ ಸ್ವಾಭಾವಿಕ ಹಾದಿಯಲ್ಲಿ ಸಾಗುತ್ತಿರುವುದೇ ಇದಕ್ಕೆ ಕಾರಣ. ಜೂನ್ 13ರ ತನಕ ವಾಯವ್ಯದಿಂದ ಆಗ್ನೇಯಕ್ಕೆ ಚಲಿಸಿರುವ ಪರಿಣಾಮದಿಂದ ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಭಾರಿ ಮಳೆಯಾಗಿತ್ತು.
ಈಗಿನಂತೆ ಜೂನ್ 18ರಿಂದ ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಜೂನ್ 17ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಸೂಚನೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಒಳನಾಡಿನ ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಮಹಾರಾಷ್ಟ್ರದ ಮುಂಬೈ ಕಡಲ ತೀರದಲ್ಲಿ ಅಲ್ಪ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮಹಾರಾಷ್ಟ್ರ ಕರಾವಳಿಯಲ್ಲೆ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಮುಂಬೈ ಭಾರಿ ಮಳೆಯ ಸಾಧ್ಯತೆಗಳಿವೆ.
ಇದೇ ಸಮಯದಲ್ಲಿ ಬಂಗಾಳಕೊಲ್ಲಿಯ ಬಾಂಗ್ಲಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, ಮುಂಗಾರು ಮತ್ತಷ್ಟು ಬಲಗೊಳ್ಳುಲು ಕಾರಣವಾಗಿದೆ.
ಈ ಎರಡೂ ತಿರುಗುವಿಕೆಯು ದುರ್ಬಲಗೊಂಡಂತಯೇ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.