Divy ayodhya app-ಸಿಎಂ ಯೋಗಿ ಆದಿತ್ಯನಾಥ ಅವರಿಂದ ದಿವ್ಯ ಅಯೋದ್ಯ ಆ್ಯಪ್ ಬಿಡುಗಡೆ, ದೇವಸ್ಥಾನ ಸಮಯ,ಹೋಟೆಲ್ ಬುಕಿಂಗ್ ಹೀಗೆ ಮಾಡಿ
<Krushirushi> <ದಿವ್ಯ ಅಯೋದ್ಯಾ ಆ್ಯಪ್> <Divy Ayodhya App> <Rama mandir> <Ayodhya ram mandir> <Ayodhya>

Divy ayodhya app-ಸಿಎಂ ಯೋಗಿ ಆದಿತ್ಯನಾಥ ಅವರಿಂದ ದಿವ್ಯ ಅಯೋದ್ಯ ಆ್ಯಪ್ ಬಿಡುಗಡೆ, ದೇವಸ್ಥಾನ ಸಮಯ,ಹೋಟೆಲ್ ಬುಕಿಂಗ್ ಹೀಗೆ ಮಾಡಿ
ಅಯೋಧ್ಯೆಯಲ್ಲಿ ಜನವರಿ 22ರಂದು
ನಡೆಯಲಿರುವ ಶ್ರೀರಾಮ ಮಂದಿರದ
ಉದ್ಘಾಟನೆಗೂ ಮುನ್ನ ಇಲ್ಲಿಗೆ ಬರುವ ಪ್ರವಾಸಿಗರು,
ವಿಶೇಷ ಅತಿಥಿಗಳು ಹಾಗೂ ವಿದೇಶಿ ಅತಿಥಿಗಳಿಗಾಗಿ
ಸಿಎಂ ಯೋಗಿ ಆದಿತ್ಯನಾಥ್ ನೂತನ ಆಯಪ್
ಬಿಡುಗಡೆ ಮಾಡಿದ್ದಾರೆ. ಅಯೋಧ್ಯೆಯ ಹೆಸರಿನಲ್ಲಿ
ಬಿಡುಗಡೆಯಾದ ಈ ಆಯಪ್ನಲ್ಲಿ ಒಂದೇ ಸ್ಥಳದಲ್ಲಿ
ಹಲವು ಸೌಲಭ್ಯಗಳು ಲಭ್ಯವಾಗಲಿವೆ
ಇತ್ತೀಚೆಗಷ್ಟೇ ಯುಪಿ ಸಿಎಂ ಈ ಆಯಪ್ ವಿನ್ಯಾಸಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಅಪ್ಲಿಕೇಶನ್ ಮೂಲಕ, ನೀವು ರಾಮನಗರ ಅಯೋಧ್ಯೆಯ ಪ್ರವಾಸಿ ತಾಣಗಳು ಮತ್ತು ಧಾರ್ಮಿಕ ಸ್ಥಳಗಳು, ಹೋಟೆಲ್, ಕ್ಯಾಬ್ ಬುಕಿಂಗ್ ಇತ್ಯಾದಿಗಳ ಬಗ್ಗೆ ಮಾಹಿತಿಯನ್ನು ಪಡೆಯಲು ಸಾಧ್ಯವಾಗುತ್ತದೆ.
ಆಯಪ್ ನ ವೈಶಿಷ್ಟ್ಯಗಳು
ಆಯಪ್ ಅನ್ನು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ ವಿನ್ಯಾಸಗೊಳಿಸಿದೆ. ಈ ಅಪ್ಲಿಕೇಶನ್ನಲ್ಲಿ ನೀವು ಅಯೋಧ್ಯೆ ನಗರಕ್ಕೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಪಡೆಯುತ್ತೀರಿ. ಈ ಆಯಪ್ನಲ್ಲಿ ಪ್ರವಾಸಿಗರು ಒಂದೇ ಸ್ಥಳದಲ್ಲಿ ಇ-ಕಾರ್, ಇ-ಬಸ್ ಮುಂತಾದ ಹಲವು ಸೌಲಭ್ಯಗಳನ್ನು ಬುಕ್ ಮಾಡಬಹುದಾದ್ದರಿಂದ ಇದನ್ನು ಸೂಪರ್ ಆಯಪ್ ಎಂದು ಕರೆಯಲಾಗುತ್ತಿದೆ. ಇದಲ್ಲದೇ, ಆಯಪ್ ಬಳಸಿಕೊಂಡು ಅಯೋಧ್ಯೆ ನಗರದ ಮಾರ್ಗಗಳ ಬಗ್ಗೆ ಮಾಹಿತಿ ಪಡೆಯಬಹುದು. ಇದರಿಂದಾಗಿ ಸಾರ್ವಜನಿಕ ಸಾರಿಗೆಯನ್ನು ಬಳಸುವಲ್ಲಿ ಪ್ರಯಾಣಿಕರಿಗೆ ಯಾವುದೇ ಅನಾನುಕೂಲತೆ ಉಂಟಾಗುವುದಿಲ್ಲ.
ಇಷ್ಟೇ ಅಲ್ಲ, ಹೋಮ್-ಸ್ಟೇ, ಹೋಟೆಲ್ ಇತ್ಯಾದಿ ವಸತಿ ಸೌಲಭ್ಯಗಳನ್ನು ಈ ಅಪ್ಲಿಕೇಶನ್ ಮೂಲಕ ಬುಕ್ ಮಾಡಬಹುದು. ಅಯೋಧ್ಯೆಗೆ ಬರುವ ಪ್ರವಾಸಿಗರಿಗೆ ಪ್ರವಾಸಿ ಮಾರ್ಗದರ್ಶಿಗಳು ಸಹ ಈ ಅಪ್ಲಿಕೇಶನ್ನಲ್ಲಿ ಲಭ್ಯವಿರುತ್ತವೆ. ಬಳಕೆದಾರರು ಈ ಅಪ್ಲಿಕೇಶನ್ ಮೂಲಕ ವೀಲ್ ಚೇರ್, ಗಾಲ್ಫ್ ಕಾರ್ಟ್ ಇತ್ಯಾದಿಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ. ನೀವು ಗೂಗಲ್ ಪ್ಲೇ ಸ್ಟೋರ್ನಿಂದ Divya Ayodhya ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಬಹುದು. ಇದುವರೆಗೆ 1 ಸಾವಿರಕ್ಕೂ ಹೆಚ್ಚು ಮಂದಿ ಈ ಆಯಪ್ ಡೌನ್ಲೋಡ್ ಮಾಡಿಕೊಂಡಿದ್ದಾರೆ.
ಬಳಸುವುದು ಹೇಗೆ?
* ಮೊದಲು ನಿಮ್ಮ Android ಸ್ಮಾರ್ಟ್ಫೋನ್ನಲ್ಲಿ ಈ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ.
https://play.google.com/store/apps/details?id=com.ayodhyadevelopmentauthority
ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿದ ನಂತರ, ನೀವು ಅದರ ಮುಖಪುಟದಲ್ಲಿ ಹಲವು ರೀತಿಯ ಆಯ್ಕೆಗಳನ್ನು ಪಡೆಯುತ್ತೀರಿ.
ಇದನ್ನು ಬಳಸಲು, ನಿಮ್ಮ ಮೊಬೈಲ್ ಸಂಖ್ಯೆಯೊಂದಿಗೆ ನೀವು ಅಪ್ಲಿಕೇಶನ್ನಲ್ಲಿ ನೋಂದಾಯಿಸಿಕೊಳ್ಳಬೇಕು.
ಇದರ ನಂತರ, ನೀವು ಅಪ್ಲಿಕೇಶನ್ಗೆ ಲಾಗ್ ಇನ್ ಮಾಡುವ ಮೂಲಕ ಅಪ್ಲಿಕೇಶನ್ನ ಎಲ್ಲಾ ವೈಶಿಷ್ಟ್ಯಗಳನ್ನು ಆನಂದಿಸಲು ಸಾಧ್ಯವಾಗುತ್ತದೆ.
* ಇದಲ್ಲದೆ, ನೀವು ಅಯೋಧ್ಯೆಗೆ ಬರುವ ಮೊದಲು ಅಯೋಧ್ಯೆ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಬಹುದು. ಈ ಅಪ್ಲಿಕೇಶನ್ನಲ್ಲಿ ನೀವು ಅಯೋಧ್ಯೆ ದೇವಾಲಯಗಳ ಆರತಿಯನ್ನು ಕಾಯ್ದಿರಿಸಲು, ಹೋಮ್-ಸ್ಟೇ ಇತ್ಯಾದಿಗಳನ್ನು ಕಾಯ್ದಿರಿಸಲು ಸೌಲಭ್ಯವನ್ನು ಪಡೆಯುತ್ತೀರಿ
Cyber alert on ram mandir message-ನಿಮ್ಮ ಮೊಬೈಲ್ ಗೂ ಬಂದಿದೇಯಾ ಈ ರೀತಿ ರಾಮಮಂದಿರಾ ಉದ್ಘಾಟನ ಆಮಂತ್ರಣ ಸಂದೇಶ! ಏನೀದರ ಅಸಲಿಯತ್ತು?
ಸೈಬರ್ ಕ್ರಿಮಿನಲ್ಗಳು ಜನರಿಂದ ಹಣ ವಸೂಲಿ ಮಾಡುವ ಯಾವ ಅವಕಾಶವನ್ನೂ ಬಿಡುವುದಿಲ್ಲ. ಸಾರ್ವಜನಿಕ ಹಿತಾಸಕ್ತಿಯ ಯಾವುದೇ ವಿಷಯವನ್ನ ಲೂಟಿ ಮಾಡುವ ಮಾರ್ಗವಾಗಿ ಪರಿವರ್ತಿಸಿಕೊಳ್ತಾರೆ. ಕಳೆದ ಕೆಲವು ದಿನಗಳಿಂದ ದೇಶದಲ್ಲಿ ರಾಮಮಂದಿರದ ಬಗ್ಗೆ ಚರ್ಚೆ ನಡೆಯುತ್ತಿದೆ.
ಕೋಟ್ಯಾಂತರ ಹಿಂದೂಗಳು ರಾಮಮಂದಿರ ಉದ್ಘಾಟನೆಗಾಗಿ ಕಾಯುತ್ತಿದ್ದಾರೆ. ಸೈಬರ್ ಕ್ರಿಮಿನಲ್ಗಳು ಇದನ್ನೇ ಟಾರ್ಗೇಟ್ ಮಾಡಿಕೊಂಡಿದ್ದಾರೆ. ಅಂದ್ದಾಗೆ, ಇದೇ ತಿಂಗಳ 22ರಂದು ಪ್ರಧಾನಿ ನರೇಂದ್ರ ಮೋದಿಯವರ ಕೈಯಿಂದ ರಾಮಮಂದಿರ ಉದ್ಘಾಟನೆಯಾಗಲಿದೆ.
ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ವಿಐಪಿ ಟಿಕೆಟ್ ಹೆಸರಿನಲ್ಲಿ ಎಪಿಕೆ ಫೈಲ್ ವಾಟ್ಸಾಪ್'ಗೆ ರವಾನೆಯಾಗುತ್ತಿದೆ. ಇವುಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಇದನ್ನು ಕ್ಲಿಕ್ ಮಾಡಿದರೆ ನಿಮ್ಮ ವೈಯಕ್ತಿಕ ವಿವರಗಳು ಹಾಗೂ ಬ್ಯಾಂಕ್ ಖಾತೆ ವಿವರಗಳು ಕಳ್ಳತನವಾಗುವ ಸಾಧ್ಯತೆ ಇದೆ. ಈ ಬಗ್ಗೆ ಟಿಎಸ್ಆರ್ಟಿಸಿ ಎಂಡಿ ಸಜ್ಜನರ್ ಟ್ವಿಟ್ ಮಾಡಿದ್ದಾರೆ
''ಅಯೋಧ್ಯೆ ರಾಮಮಂದಿರ ಉದ್ಘಾಟನೆ
ಕಾರ್ಯಕ್ರಮಕ್ಕೆ ವಿಐಪಿ ಟಿಕೆಟ್ ಬೇಕೇ? ಹಾಗಿದ್ರೆ, ಈ
ಲಿಂಕ್ ಕ್ಲಿಕ್ ಮಾಡಿ. ಈ apk ಫೈಲ್ ನೇರವಾಗಿ
ಡೌನ್ಲೋಡ್ ಮಾಡಿ' ಎನ್ನುವ ನಿಮಗೆ WhatsApp
ಸಂದೇಶ ಬಂದಿದೆಯೇ.? ಹಾಗಿದ್ರೆ, ತಸ್ಮಾತ್ ಎಚ್ಚರ.!
ಅಂತಹ ಸಂದೇಶದಲ್ಲಿರುವ ಲಿಂಕ್ಗಳ ಮೇಲೆ ನೀವು
ಕ್ಲಿಕ್ ಮಾಡಿದರೂ ಅಥವಾ APK ಫೈಲ್ಗಳನ್ನ
ಡೌನ್ಲೋಡ್ ಮಾಡಿದ್ರೆ ಅಷ್ಟೇ! ಸೈಬರ್
ಅಪರಾಧಿಗಳು ನಿಮ್ಮ ಡೇಟಾವನ್ನ ಕದಿಯುತ್ತಾರೆ. ನಿಮ್ಮ
ಎಲ್ಲಾ ವೈಯಕ್ತಿಕ ವಿವರಗಳು ಮತ್ತು ಬ್ಯಾಂಕ್
ವಿವರಗಳನ್ನು ಕಳುವಾಗಲಿದೆ ಮತ್ತು ವಂಚನೆಗಳನ್ನ
ಮಾಡಲಾಗುತ್ತದೆ ಎಂದು ಸಜ್ಜನರ್ ಟ್ವಿಟ್ ಮಾಡಿ
ಎಚ್ಚರಿಕೆ ನೀಡಿದ್ದಾರೆ.
Belehani Parihara Patti-ಆಧಾರ್ ನಂಬರ್ ಹಾಕಿ ಬೆಳೆಹಾನಿ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.
ಬೆಳೆಹಾನಿ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/FarmerDeclarationReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ ವಿಕ್ಷಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ FID ಇರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಸಿಗಲಿದೆ
ಬೆಳೆಹಾನಿ ಪರಿಹಾರ ಜಮಾ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service87/
ನಂತರ ನಿಮ್ಮ ಜಿಲ್ಲೆ, ತಾಲೂಕು, ಹೊಬಳಿ, ಗ್ರಾಮ, ವರ್ಷ, ಹಂಗಾಮು ಹಾಗೂ ಬೆಳೆಹಾನಿ ಕಾರಣ select ಮಾಡಿ,Get report ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(bele hani parihara) ಜಮಾ ಮಾಹಿತಿ ದೊರೆಯಲಿದೆ
ನಂತರ view status ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಮಾಹಿತಿ ದೊರೆಯಲಿದೆ
ಈ ಲೇಖನದ ಕೊನೆಯಲ್ಲಿ ಪಟ್ಟಿಯನ್ನು ಲಗತ್ತಿಸಲಾಗಿದೆ ಇದೇ ರೀತಿ ಎಲ್ಲಾ ಗ್ರಾಮ ಪಂಚಾಯತಿ,ರೈತ ಸಂಪರ್ಕ ಕೇಂದ್ರಗಳಲ್ಲಿ FID ಮಾಡಿಸದ ಪಟ್ಟಿಯನ್ನು ಲಗತ್ತಿಸಲಾಗಿದ್ದು,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ FID ಮಾಡಿಸಿಕೊಳ್ಳಿ
ಬರ ಪರಿಹಾರದ ಹಣ ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್ಐಡಿ ಮಾಡಿಸಲೇಬೇಕು. ಒಂದು ವೇಳೆ ಎಫ್ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್ಐಡಿ ಮಾಡದೆ ಇರುವ ಕೂಡಲೇ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್ಐಡಿ ಮಾಡಿಸಬೇಕು.
ಈವರೆಗೆ ಎಫ್ಐಡಿ ಮಾಡಿಸದೇ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.
ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.
ಇದುವರೆಗೂ ಫ್ರುಟ್ಸ್ ನಲ್ಲಿ ನೊಂದಣಿ ಆಗದೇ ಇರುವ ರೈತರು ಆಧಾರ್ ಕಾರ್ಡ್, ಪಹಣಿ, ಜಾತಿ ಪ್ರಮಾಣಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ವಿವರಗಳನ್ನು ಫ್ರುಟ್ಸ್ನಲ್ಲಿ ದಾಖಲಿಸಿಕೊಂಡು ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಹಾಗೂ ವಿವಿಧ ಇಲಾಖೆಗಳ ಸೌಲಭ್ಯ ಪಡೆದುಕೊಳ್ಳುವಂತೆ ಕೋರಲಾಗಿದೆ.
ಫ್ರುಟ್ಸ್ ತಂತ್ರಾಂಶದಲ್ಲಿ ರೈತರು ತಮ್ಮ ಜಮೀನಿನ ವಿವರವನ್ನು ನೊಂದಾಯಿಸಿ, ರೈತರ ಗುರುತಿನ ಚೀಟಿ ಸಂಖ್ಯೆ ಪಡೆದುಕೊಳ್ಳುವುದು ಅಗತ್ಯವಾಗಿರುತ್ತದೆ. ಈ ಮಾಹಿತಿಯು ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳನ್ನು ನೀಡುವುದಲ್ಲದೆ, ಇತರೆ ಇಲಾಖೆಗಳಿಗೂ ಸಹ ಉತ್ತಮ ಮಾಹಿತಿಯಾಗಿರುತ್ತದೆ. ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಂದರ್ಭದಲ್ಲಿ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯಡಿ ಫಲಾನುಭವಿಗಳಾಗಲು ಹಾಗೂ ಪರಿಹಾರ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲು ರೈತರು ಫ್ರುಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಸಿ, ಎಫ್ಐಡಿ ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿದೆ.
ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಕೊಳ್ಳದೇ ಇರುವ ರೈತರು ಕೂಡಲೆ ಫ್ರುಟ್ಸ್ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೆ ಫ್ರುಟ್ಸ್ನಲ್ಲಿ ನೊಂದಣಿ ಮಾಡಿಸಿಕೊಂಡವರು, ಅಂದರೆ ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 01 ಎಕರೆ ಮಾತ್ರ ನಮೂದಿಸಿರುತ್ತಾರೆ, ಅಂತಹವರಿಗೆ ಕೇವಲ 01 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ, ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ಪಹಣಿಯ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ ಪಾವತಿಯಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಫ್ರುಟ್ಸ್ ನೊಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳನ್ನು ಕೂಡಲೆ ಜೋಡಣೆ ಮಾಡಲು ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳು, ನಾಡ ಕಚೇರಿ, ರೈತ ಸಂಪರ್ಕ ಕೇಂದ್ರ, ರೇಷ್ಮೆ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಬಹುದು.
FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.
ಏನಿದು ಫ್ರೂಟ್ಸ್ ನಂಬರ್
ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.
ನೋಂದಣಿ ಹೇಗೆ?
ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.
ಏಕೆ ನೋಂದಾಯಿಸಬೇಕು?
ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್ ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ
ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.
ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.
ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253