Mungaru 2025-ಮೇ 27 ಅಲ್ಲ,ಅದಕ್ಕಿಂತಲೂ ಮೊದಲೇ ಮುಂಗಾರು ಪ್ರವೇಶ
Mungaru 2025-ಮೇ 27 ಅಲ್ಲ,ಅದಕ್ಕಿಂತಲೂ ಮೊದಲೇ ಮುಂಗಾರು ಪ್ರವೇಶ

Mungaru 2025-ಮೇ 27 ಅಲ್ಲ,ಅದಕ್ಕಿಂತಲೂ ಮೊದಲೇ ಮುಂಗಾರು ಪ್ರವೇಶ
ನೈಋತ್ಯ ಮಾನ್ಸೂನ್ (Monsoon 2025) ಮುಂದಿನ 4ರಿಂದ 5 ದಿನಗಳಲ್ಲಿ ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಪ್ರತಿ ವರ್ಷ ಜೂನ್ ತಿಂಗಳ ಆರಂಭದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶವಾಗುತ್ತಿತ್ತು.
ಆದರೆ ಈ ವರ್ಷ ಬಹಳ ಮುಂಚೆಯೇ ಆಗಬಹುದು. ಐಎಂಡಿ ಈ ಹಿಂದೆ ಮೇ 27ರ ವೇಳೆಗೆ ಮಾನ್ಸೂನ್ ಕೇರಳವನ್ನು ತಲುಪುತ್ತದೆ ಎಂದು ನಿರೀಕ್ಷಿಸಿತ್ತು. ಆದರೆ, ಅದಕ್ಕೂ 2-3 ದಿನಗಳು ಮುಂಚಿತವಾಗಿಯೇ ಮಾನ್ಸೂನ್ಆಗಮನವಾಗುವ ಸಾಧ್ಯತೆಯಿದೆ. ಮುಂಚಿತವಾಗಿ ಮಳೆಯಾಗುವುದರಿಂದ ಬಿಸಿಲಿನ ಬೇಗೆ ಕಡಿಮೆಯಾಗುವುದಲ್ಲದೆ, ಭತ್ತ, ಜೋಳ, ಹತ್ತಿ, ಸೋಯಾಬೀನ್ ಮತ್ತು ಇತರ ಎಣ್ಣೆಬೀಜಗಳಂತಹ ಬಂಪರ್ ಬೆಳೆಗಳ ಬಿತ್ತನೆಯೂ ಹೆಚ್ಚಾಗುತ್ತದೆ.
“ಪ್ರಸ್ತುತ ಇರುವ ವೇಗದಲ್ಲಿಯೇ ಮಳೆ ಮುಂದುವರೆದರೆ ಮತ್ತು ಇತರ ಪರಿಸ್ಥಿತಿಗಳು ಅನುಕೂಲಕರವಾಗಿದ್ದರೆ ಮುಂದಿನ 4-5 ದಿನಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಆರಂಭಕ್ಕೆ ಪರಿಸ್ಥಿತಿಗಳು ಅನುಕೂಲಕರವಾಗುವ ಸಾಧ್ಯತೆಯಿದೆ” ಎಂದು ಐಎಂಡಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ವರ್ಷ, ಮಾನ್ಸೂನ್ ಮೇ 30ರಂದು ಕೇರಳದ ಕರಾವಳಿಯನ್ನು ತಲುಪಿತು. ಇದಕ್ಕೂ ಮೊದಲು ಜೂನ್ 8 (2023), ಮೇ 29 (2022), ಜೂನ್ 3 (2021) ಮತ್ತು ಜೂನ್ 1 (2020)ರಂದು ಕೇರಳದಲ್ಲಿ ಮುಂಗಾರು ಪ್ರವೇಶವಾಗಿತ್ತು.
ನೈಋತ್ಯ ಮಾನ್ಸೂನ್ ಭಾರತದ ಕೃಷಿ ಆರ್ಥಿಕತೆಗೆ ಅತ್ಯಗತ್ಯವಾಗಿದ್ದು, ವಾರ್ಷಿಕ ಮಳೆಯ ಸುಮಾರು 70%ರಷ್ಟು ಭಾಗವನ್ನು ಹೊಂದಿದೆ. ಇದು ದೇಶದ ನಿವ್ವಳ ಬಿತ್ತನೆ ಪ್ರದೇಶದ ಸುಮಾರು 51% ಅನ್ನು ಬೆಂಬಲಿಸುತ್ತದೆ.
ಮೇ 13ರಂದು ದಕ್ಷಿಣ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ದಕ್ಷಿಣ ಅಂಡಮಾನ್ ಸಮುದ್ರ, ನಿಕೋಬಾರ್ ದ್ವೀಪಗಳು ಮತ್ತು ಉತ್ತರ ಅಂಡಮಾನ್ ಸಮುದ್ರದ ಕೆಲವು ಭಾಗಗಳಿಗೆ ಮಾನ್ಸೂನ್ ನಿಗದಿತ ಸಮಯಕ್ಕಿಂತ 2 ದಿನ ಮುಂಚಿತವಾಗಿ ಪ್ರವೇಶಿಸಿತ್ತು. ದಕ್ಷಿಣ ಅರೇಬಿಯನ್ ಸಮುದ್ರ, ಮಾಲ್ಡೀವ್ಸ್ ಮತ್ತು ಕೊಮೊರಿನ್ ಪ್ರದೇಶದ ಹೆಚ್ಚಿನ ಭಾಗಗಳು ಅದರಲ್ಲೂ ಲಕ್ಷದ್ವೀಪದ ಕೆಲವು ಭಾಗಗಳು, ಕೇರಳ, ತಮಿಳುನಾಡು, ಕರ್ನಾಟಕ, ದಕ್ಷಿಣ ಮತ್ತು ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಈಶಾನ್ಯ ಬಂಗಾಳ ಕೊಲ್ಲಿಯ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಈ ವರ್ಷ ದೇಶಾದ್ಯಂತ ನೈಋತ್ಯ ಮಾನ್ಸೂನ್ ಋತುಮಾನದ ಮಳೆ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ. ಮೇ 22ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳು ರೆಡ್ ಅಲರ್ಟ್ನಲ್ಲಿವೆ. ಕೇರಳ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಮೇ 24ರವರೆಗೆ ಭಾರೀ ಮಳೆಯಾಗುವ ಬಗ್ಗೆ ಐಎಂಡಿ ಎಚ್ಚರಿಕೆ ನೀಡಿದೆ.
SACHET-ಹವಾಮಾನ ಮುನ್ಸೂಚನೆಗೆ ಹೊಸ ಆ್ಯಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ,ನಿಮ್ಮ ಮೊಬೈಲ್ ನಲ್ಲೇ ಹೀಗೆ ತಿಳಿದುಕೊಳ್ಳಿ ಹವಾಮಾನ ಮುನ್ಸೂಚನೆ
ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ಮನ್ ಕಿ ಬಾತ್ನಲ್ಲಿ (Mann Ki Baat)ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA)ದ CAP ಆಧಾರಿತ ಇಂಟಿಗ್ರೇಟೆಡ್ ಅಲರ್ಟ್ ಸಿಸ್ಟಮ್ ಸ್ಯಾಚೆಟ್ ಆಪ್ ಬಗ್ಗೆ ಉಲ್ಲೇಖಿಸಿದ್ದಾರೆ. ಈ ವ್ಯವಸ್ಥೆಯು ಭಾರತದಾದ್ಯಂತ ಲಭ್ಯವಿದ್ದು, ಅದರ ವೆಬ್ಸೈಟ್ನಲ್ಲಿ ಉಲ್ಲೇಖಿಸಿದಂತೆ ಭೂ ಗುಪ್ತಚರವನ್ನು ಬಳಕೆ ಮಾಡಿಕೊಂಡು ಬಹು ತಂತ್ರಜ್ಞಾನದ ಮೂಲಕ ಮುಂಚಿನ ಎಚ್ಚರಿಕೆಯ ನೈಜ-ಸಮಯದ ಬಗ್ಗೆ ಮಾಹಿತಿಯನ್ನು ಪಡೆಯಬಹುದಾಗಿದೆ.
ಸಚೇತ್ನ ವೆಬ್ಸೈಟ್ ಪ್ರಕಾರ,"XX-NDMAEW ಹೆಡರ್ನಿಂದ ಎಸ್ಎಂಎಸ್ ಮೂಲಕ ವಿಪತ್ತು ಎಚ್ಚರಿಕೆಗಳನ್ನು ಸ್ವೀಕರಿಸಿಕೊಳ್ಳಬಹುದಾಗಿದ್ದು, ಬಳಕೆದಾರರು ಜಾಗರೂಕರಾಗಿರಬಹುದಾಗಿದೆ. ಆಯಪ್ ಅನ್ನು ಪ್ರತ್ಯೇಕವಾಗಿ "ಹವಾಮಾನ ಮುನ್ಸೂಚನೆ ಮಾಹಿತಿಗಾಗಿ ಮತ್ತು ಬಹು ಸ್ಥಳಗಳ ಚಂದಾದಾರಿಕೆ ಸೌಲಭ್ಯದೊಂದಿಗೆ ವಿಪತ್ತು ಎಚ್ಚರಿಕೆಗಳನ್ನು ಸ್ವೀಕರಿಸಲು ಬಳಸಬಹುದು". ಎಂದು ಮೋದಿ ತಿಳಿಸಿದ್ದಾರೆ.
ಬಳಕೆದಾರರು ತಮ್ಮ ಡೆಸ್ಕ್ಟಾಪ್ ಅಥವಾ ಲ್ಯಾಪ್ಟಾಪ್ ಬ್ರೌಸರ್ಗಳಲ್ಲಿ ಬ್ರೌಸರ್ ನೋಟಿಫಿಕೇಶ್ ಅನ್ನು ಪಡೆಯುತ್ತಾರೆ. ಬಳಕೆದಾರರು ವಿಪತ್ತು ಸಂಬಂಧಿತ ಮಾಹಿತಿಯ ಅಧಿಸೂಚನೆಯನ್ನು ತತ್ ಕ್ಷಣವೇ ಪಡೆಯಬಹುದು ಎಂದು ವೆಬ್ಸೈಟ್ ನಲ್ಲಿ ಉಲ್ಲೇಖ ಮಾಡಿದೆ.
ಆರ್ಎಸ್ಎಸ್ ಫೀಡ್ನಲ್ಲಿಯೂ ಎಚ್ಚರಿಕೆಯನ್ನು ಪ್ರಕಟಿಸಲಾಗುತ್ತದೆ. ಅಲ್ಲದೆ ಸುದ್ದಿ ಸಂಸ್ಥೆಗಳು ಇದಕ್ಕೆ ಚಂದಾದಾರರಾಗಿದ್ದರೆ ಮುಂಚಿತವಾಗಿ ಈ ಬಗ್ಗೆ ಮಾಹಿತಿ ಪ್ರಕಟ ಮಾಡಬಹುದಾಗಿದೆ. ಈ ಮೂಲಕ ಮುಂದೆ ಆಗುವ ದೊಡ್ಡ ಮಟ್ಟದ ಅನಾಹುತಗಳನ್ನು ತಪ್ಪಿಸಬಹುದಾಗಿದೆ.
ವೆಬ್ಸೈಟ್ನಲ್ಲಿ ಪ್ರಕಟವಾದ ಮಾಹಿತಿಯ ಪ್ರಕಾರ, ಆಪ್ ಅನ್ನು ಉತ್ತರ ಪ್ರದೇಶದಲ್ಲಿ ಸುಮಾರು 5.4 ಕೋಟಿ ಜನರು, ರಾಷ್ಟ್ರ ರಾಜಧಾನಿಯಲ್ಲಿ 4.6 ಕೋಟಿ ಜನರು, ಮಹಾರಾಷ್ಟ್ರದಲ್ಲಿ 1.1 ಕೋಟಿ ಜನರು ಡೌನ್ಲೋಡ್ ಮಾಡಿದ್ದಾರೆ.
ನೀವೂ ಆ್ಯಪ್ ಮೂಲಕ ಮಳೆ ಮುನ್ಸೂಚನೆ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://play.google.com/store/apps/details?id=com.cdotindia.capsachet
ನಂತರ ಆ್ಯಪ್ ಡೌನಲ್ಲೋಡ್ ಮಾಡಿಕೊಳ್ಳಿ
ನಂತರ ಮುಂದೆ ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ ಮುಂದೆ ಮೇಲೆ ಕ್ಲಿಕ್ ಮಾಡಿ
ನಂತರ /(Yes) ಮಾರ್ಕ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಸಂಖ್ಯೆ ಅಥವಾ ಇಮೇಲ್ ಐಡಿಯನ್ನು ನಮೂದಿಸಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ
ನಂತರ ಈ ಕೆಳಗಿನಂತೆ ನಿಮಗೆ ಹವಾಮಾನ ಮಾಹಿತಿ ಸಿಗಲಿದೆ