ಇಂದು ಈ ಪಟ್ಟಿಯಲ್ಲಿರುವ ಕರ್ನಾಟಕದ 41,40,106 ರೈತರಿಗೆ ಜಮಾ ಆಗಲಿದೆ ಪಿಎಂ ಕಿಸಾನ್ 22ನೇ ಕಂತು-Pmkisan 22nd instalment amount
<Krushirushi> <ಪಿಎಂ ಕಿಸಾನ್ 22ನೇ ಕಂತು> <ಪಿಎಂಕಿಸಾನ್> <ಪಿಎಂ ಕಿಸಾನ್> <ಪಿಎಂ ಕಿಸಾನ್ ಕೆವೈಸಿ> <ಪಿಎಂ ಕಿಸಾನ್ 22ನೇ ಕಂತಿನ ದಿನಾಂಕ> <ಪಿಎಂಕಿಸಾನ್ 22ನೇ ಕಂತಿನ ಅರ್ಹ ಮತ್ತು ಅನರ್ಹ ಪಟ್ಟಿ> <ಪಿಎಂ ಕಿಸಾನ್ 22ನೇ ಕಂತಿನ ಫಲಾನುಭವಿಗಳ ಪಟ್ಟಿ> <ಪಿಎಂ ಕಿಸಾನ್ ಸ್ಟೇಟಸ್> <pmkisan 22nd instalment date> <pmkisan 22nd instalment eligible and ineligible list> <Pmkisan> <pmkisan 22nd instalment> <pmkisan Karnataka> <pmkisan 22nd instalment beneficiary list> <pmkisan beneficiary list> <pmkisan beneficiary status> <pmkisan ineligible list> <pmkisan 22nd instalment ineligible list>
ಇಂದು ಈ ಪಟ್ಟಿಯಲ್ಲಿರುವ ಕರ್ನಾಟಕದ 41,40,106 ರೈತರಿಗೆ ಜಮಾ ಆಗಲಿದೆ ಪಿಎಂ ಕಿಸಾನ್ 22ನೇ ಕಂತು-Pmkisan 22nd instalment amount
ಪ್ರಧಾನ ಮಂತ್ರಿಗಳು 2026 ನೇ ಮಾರ್ಚ್ 13 ರಂದು ಸಂಜೆ 5 ಗಂಟೆಗೆ ಅಸ್ಸಾಂನ ಗುವಾಹಟಿಯಲ್ಲಿ ಆಯೋಜಿಸಲಾದ ಬೃಹತ್ ಸಮಾರಂಭದಲ್ಲಿ ದೇಶಾದ್ಯಂತದ ರೈತರಿಗೆ 22ನೇ ಕಂತಿನ ಹಣ ಬಿಡುಗಡೆಗೆ ಚಾಲನೆ ನೀಡಲಿದ್ದಾರೆ.
ಕರ್ನಾಟಕದ ಎಷ್ಟು ರೈತರಿಗೆ ಲಾಭ?
ಕರ್ನಾಟಕ ರಾಜ್ಯದ ಒಟ್ಟು 41,40,106 ರೈತ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದೆ. ಕೇಂದ್ರ ಸರ್ಕಾರವು ರಾಜ್ಯದ ರೈತರಿಗಾಗಿ ಒಟ್ಟು 828.02 ಕೋಟಿ ರೂ.ಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ (DBT) ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಿದೆ.
ಈ ಯೋಜನೆಯನ್ನು 24 ಫೆಬ್ರವರಿ 2019 ರಂದು ಅಧಿಕೃತವಾಗಿ ಜಾರಿಗೆ ತರಲಾಯಿತು. ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ (ಬೀಜ, ಗೊಬ್ಬರ ಇತ್ಯಾದಿ ಖರೀದಿಗಾಗಿ) ಅರ್ಹ ರೈತ ಕುಟುಂಬಗಳಿಗೆ ಪ್ರತಿ ವರ್ಷಕ್ಕೆ 6,000 ರೂ.ಗಳನ್ನು ನೀಡಲಾಗುತ್ತದೆ. ಈ ಮೊತ್ತವನ್ನು ತಲಾ 2,000 ರೂ.ಗಳಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳ ಅಂತರದಲ್ಲಿ ವಿತರಿಸಲಾಗುತ್ತದೆ.
ಮಾರ್ಚ್ 13 ರಂದು ನಡೆಯಲಿರುವ ಈ ಐತಿಹಾಸಿಕ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕ್ರಮವನ್ನು “ಪಿ.ಎಂ. ಕಿಸಾನ್ ಉತ್ಸವ ದಿವಸ” ಎಂದು ಆಚರಿಸಲಾಗುತ್ತಿದ್ದು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಇ-ಕೆವೈಸಿ ಪೂರ್ಣಗೊಳಿಸಿ
ಅರ್ಹ ರೈತರು ತಮ್ಮ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವುದನ್ನು ಖಚಿತಪಡಿಸಿಕೊಳ್ಳುವುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ pmkisan.gov.in ಗೆ ಭೇಟಿ ನೀಡಬಹುದು ಎಂದು ಅಪರ ಕೃಷಿ ನಿರ್ದೇಶಕರು (ಮಾಹಿತಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏನಿದು ಪಿಎಂ ಕಿಸಾನ್
ಪಿಎಂ ಕಿಸಾನ್ ಅಥವಾ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಎಂಬುದು ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿದೆ. ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಲ್ಲಿ ಅರ್ಹ ರೈತ ಕುಟುಂಬಗಳಿಗೆ ಪ್ರತಿ ವರ್ಷ 6,000 ಹಣವನ್ನು ನೀಡಲಾಗುತ್ತದೆ. ಮೂರು ಕಂತಿನ ಮೂಲಕ ಇದನ್ನು ನೀಡಲಾಗುತ್ತದೆ. ತಮ್ಮ ಹೆಸರಿನಲ್ಲಿ ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ರೈತ ಕುಟುಂಬಗಳು ಈ ಯೋಜನೆಗೆ ಅರ್ಹರಾಗಿದ್ದಾರೆ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

