Rain alert-ವಾಯುಭಾರ ಕುಸಿತ,ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

<Krushirushi> <Rain alert> < ಮಳೆ ನಕ್ಷತ್ರಗಳು 2025> <Male nakshatragalu> <Male 2025> <male Mahiti> <Male munsuchane> <male> <rain forecast> <ಮಳೆ ನಕ್ಷತ್ರ> <ಮಳೆ ನಕ್ಷತ್ರಗಳು> <ಮಳೆ> <ಮಳೆ ಮಾಹಿತಿ> <ಮಳೆ ಮುನ್ಸೂಚನೆ> <ಮುಂಗಾರು ಮಳೆ> <ರೈತ> <ಬೆಳೆಸುದ್ದಿ>

Rain alert-ವಾಯುಭಾರ ಕುಸಿತ,ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Rain alert-ವಾಯುಭಾರ ಕುಸಿತ,ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

 ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದುಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು.
ಹಾಸನ, ಕೊಡಗು ಜಿಲ್ಲೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಕಾಸರಗೋಡು ಒಂದೆರಡು ಕಡೆ ರಾತ್ರಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿಯಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣವು ಮುಂದುವರಿಯುವ ಲಕ್ಷಣಗಳಿದ್ದು, ವಾರದಲ್ಲಿ 2 ರಿಂದ 3 ಮಳೆಯ ಸಾಧ್ಯತೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನ ಮುನ್ಸೂಚನೆಯಂತೆ ಮುಂದಿನ ದಿನಗಳಲ್ಲಿ ದಿನ ಬಿಟ್ಟು ದಿನ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿಯ ವೇಳೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಮಾರ್ಚ್ 17ರ ನಂತರ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. 

ಲಾನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾದಂತೆ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಸ್ವಲ್ಪ ತಡವಾಗಬಹುದು.

Male nakshatragalu-2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು


2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-14-4-2025

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-28-4-2025

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2025

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-25-5-2025

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-6-7-2025

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-20-7-2025

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-31-8-2025

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2025

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-27-9-2025

ಉತ್ತಮ ಮಳೆ

14.ಚಿತ್ತ

ದಿನಾಂಕ-11-10-2025

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-24-10-2025

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2025

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs  ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in  website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.     

https://krushirushi.in/contact-us


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ