Karnataka rain alert-ಈ ಜಿಲ್ಲೆಗಳಲ್ಲಿ ಬೆಳಿಗ್ಗೆ ರಣ ಬಿಸಿಲು,ಸಂಜೆಯಾಗುತ್ತಿದ್ದಂತೆ ಮಳೆಯ ಅರ್ಭಟ
ಬೆಳಗ್ಗೆ ಬಿಸಿಲು.. ಸಂಜೆ ಮಳೆ ಆರ್ಭಟ. ಕಳೆದ ಒಂದು ವಾರದಿಂದಲೂ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ(Karnataka rain alert)ಅಬ್ಬರಿಸುತ್ತಿದ್ದು, ಮಳೆ ಜತೆಗಿನ ಬಿರುಗಾಳಿಗೆ ರೈತರ ಬೆಳೆಗಳು ಮಣ್ಣುಪಾಲಾಗ್ತಿವೆ . ಭತ್ತ, ಪಪ್ಪಾಯಿ, ಮಾವು ನೆಲದ ಪಾಲಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕ್ಕಿದ್ದಾರೆ.

Karnataka rain alert-ಈ ಜಿಲ್ಲೆಗಳಲ್ಲಿ ಬೆಳಿಗ್ಗೆ ರಣ ಬಿಸಿಲು,ಸಂಜೆಯಾಗುತ್ತಿದ್ದಂತೆ ಮಳೆಯ ಅರ್ಭಟ
ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಮೋಡ ಸ್ವಲ್ಪ ಜಾಸ್ತಿ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ನಾಳೆ ಮುಂಜಾನೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯ ಉಳಿದ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. *ಗಾಳಿಯ ಪ್ರಭಾವ ಅಂದಾಜಿಸಲು ಸಾಧ್ಯವಾಗುತ್ತಿಲ್ಲ.*
ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಮೇ 6ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಶಿವಮೊಗ್ಗ ಜಿಲ್ಲೆಯಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಮೇ 4ರಿಂದ ಮಲೆನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಮಟ್ಟಿಗೆ ಕಡಮೆಯಾಗುವ ಸಾಧ್ಯತೆಗಳಿದ್ದರೂ ಮೇ 6ರಿಂದ ಹೆಚ್ಚಾಗುವ ನಿರೀಕ್ಷೆ ಇದೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳ ಆಂದ್ರಾ ಗಡಿಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ. ಕಲಬುರ್ಗಿ - ಮಹಾರಾಷ್ಟ್ರ ಗಡಿ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 4 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 6ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.
SACHET-ಹವಾಮಾನ ಮುನ್ಸೂಚನೆಗೆ ಹೊಸ ಆ್ಯಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ,ನಿಮ್ಮ ಮೊಬೈಲ್ ನಲ್ಲೇ ಹೀಗೆ ತಿಳಿದುಕೊಳ್ಳಿ ಹವಾಮಾನ ಮುನ್ಸೂಚನೆ
ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ಮನ್ ಕಿ ಬಾತ್ನಲ್ಲಿ (Mann Ki Baat)ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA)ದ CAP ಆಧಾರಿತ ಇಂಟಿಗ್ರೇಟೆಡ್ ಅಲರ್ಟ್ ಸಿಸ್ಟಮ್ ಸ್ಯಾಚೆಟ್ ಆಪ್ ಬಗ್ಗೆ ಉಲ್ಲೇಖಿಸಿದ್ದಾರೆ. ಈ ವ್ಯವಸ್ಥೆಯು ಭಾರತದಾದ್ಯಂತ ಲಭ್ಯವಿದ್ದು, ಅದರ ವೆಬ್ಸೈಟ್ನಲ್ಲಿ ಉಲ್ಲೇಖಿಸಿದಂತೆ ಭೂ ಗುಪ್ತಚರವನ್ನು ಬಳಕೆ ಮಾಡಿಕೊಂಡು ಬಹು ತಂತ್ರಜ್ಞಾನದ ಮೂಲಕ ಮುಂಚಿನ ಎಚ್ಚರಿಕೆಯ ನೈಜ-ಸಮಯದ ಬಗ್ಗೆ ಮಾಹಿತಿಯನ್ನು ಪಡೆಯಬಹುದಾಗಿದೆ.
ಸಚೇತ್ನ ವೆಬ್ಸೈಟ್ ಪ್ರಕಾರ,"XX-NDMAEW ಹೆಡರ್ನಿಂದ ಎಸ್ಎಂಎಸ್ ಮೂಲಕ ವಿಪತ್ತು ಎಚ್ಚರಿಕೆಗಳನ್ನು ಸ್ವೀಕರಿಸಿಕೊಳ್ಳಬಹುದಾಗಿದ್ದು, ಬಳಕೆದಾರರು ಜಾಗರೂಕರಾಗಿರಬಹುದಾಗಿದೆ. ಆಯಪ್ ಅನ್ನು ಪ್ರತ್ಯೇಕವಾಗಿ "ಹವಾಮಾನ ಮುನ್ಸೂಚನೆ ಮಾಹಿತಿಗಾಗಿ ಮತ್ತು ಬಹು ಸ್ಥಳಗಳ ಚಂದಾದಾರಿಕೆ ಸೌಲಭ್ಯದೊಂದಿಗೆ ವಿಪತ್ತು ಎಚ್ಚರಿಕೆಗಳನ್ನು ಸ್ವೀಕರಿಸಲು ಬಳಸಬಹುದು". ಎಂದು ಮೋದಿ ತಿಳಿಸಿದ್ದಾರೆ.
ಬಳಕೆದಾರರು ತಮ್ಮ ಡೆಸ್ಕ್ಟಾಪ್ ಅಥವಾ ಲ್ಯಾಪ್ಟಾಪ್ ಬ್ರೌಸರ್ಗಳಲ್ಲಿ ಬ್ರೌಸರ್ ನೋಟಿಫಿಕೇಶ್ ಅನ್ನು ಪಡೆಯುತ್ತಾರೆ. ಬಳಕೆದಾರರು ವಿಪತ್ತು ಸಂಬಂಧಿತ ಮಾಹಿತಿಯ ಅಧಿಸೂಚನೆಯನ್ನು ತತ್ ಕ್ಷಣವೇ ಪಡೆಯಬಹುದು ಎಂದು ವೆಬ್ಸೈಟ್ ನಲ್ಲಿ ಉಲ್ಲೇಖ ಮಾಡಿದೆ.
ಆರ್ಎಸ್ಎಸ್ ಫೀಡ್ನಲ್ಲಿಯೂ ಎಚ್ಚರಿಕೆಯನ್ನು ಪ್ರಕಟಿಸಲಾಗುತ್ತದೆ. ಅಲ್ಲದೆ ಸುದ್ದಿ ಸಂಸ್ಥೆಗಳು ಇದಕ್ಕೆ ಚಂದಾದಾರರಾಗಿದ್ದರೆ ಮುಂಚಿತವಾಗಿ ಈ ಬಗ್ಗೆ ಮಾಹಿತಿ ಪ್ರಕಟ ಮಾಡಬಹುದಾಗಿದೆ. ಈ ಮೂಲಕ ಮುಂದೆ ಆಗುವ ದೊಡ್ಡ ಮಟ್ಟದ ಅನಾಹುತಗಳನ್ನು ತಪ್ಪಿಸಬಹುದಾಗಿದೆ.
ವೆಬ್ಸೈಟ್ನಲ್ಲಿ ಪ್ರಕಟವಾದ ಮಾಹಿತಿಯ ಪ್ರಕಾರ, ಆಪ್ ಅನ್ನು ಉತ್ತರ ಪ್ರದೇಶದಲ್ಲಿ ಸುಮಾರು 5.4 ಕೋಟಿ ಜನರು, ರಾಷ್ಟ್ರ ರಾಜಧಾನಿಯಲ್ಲಿ 4.6 ಕೋಟಿ ಜನರು, ಮಹಾರಾಷ್ಟ್ರದಲ್ಲಿ 1.1 ಕೋಟಿ ಜನರು ಡೌನ್ಲೋಡ್ ಮಾಡಿದ್ದಾರೆ.
ನೀವೂ ಆ್ಯಪ್ ಮೂಲಕ ಮಳೆ ಮುನ್ಸೂಚನೆ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://play.google.com/store/apps/details?id=com.cdotindia.capsachet
ನಂತರ ಆ್ಯಪ್ ಡೌನಲ್ಲೋಡ್ ಮಾಡಿಕೊಳ್ಳಿ
ನಂತರ ಮುಂದೆ ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ ಮುಂದೆ ಮೇಲೆ ಕ್ಲಿಕ್ ಮಾಡಿ
ನಂತರ /(Yes) ಮಾರ್ಕ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಸಂಖ್ಯೆ ಅಥವಾ ಇಮೇಲ್ ಐಡಿಯನ್ನು ನಮೂದಿಸಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ
ನಂತರ ಈ ಕೆಳಗಿನಂತೆ ನಿಮಗೆ ಹವಾಮಾನ ಮಾಹಿತಿ ಸಿಗಲಿದೆ