Krushi Rushi News Website & : Krushi Rushi https://krushirushi.in/rss/category/krushi-rushi Krushi Rushi News Website & : Krushi Rushi en Copyright 2025 Krushi Rushi & All Rights Reserved Pmkisan pending payment&ರಾಜ್ಯದ 22 ಸಾವಿರ ರೈತರಿಗೆ ಪಿಎಂ ಕಿಸಾನ್ ಬಾಕಿ ಹಣ ಬಿಡುಗಡೆ https://krushirushi.in/Pmkisan-pending-payment-2419 https://krushirushi.in/Pmkisan-pending-payment-2419 Pmkisan pending payment-ರಾಜ್ಯದ 22 ಸಾವಿರ ರೈತರಿಗೆ ಪಿಎಂ ಕಿಸಾನ್ ಬಾಕಿ ಹಣ ಬಿಡುಗಡೆ


ಹಲವು ಕಾರಣಗಳಿಂದ ಪಿಎಂ-ಕಿಸಾನ್‌ ಯೋಜನೆಯ (PM-KISAN scheme) ಹಣವನ್ನು ರಾಜ್ಯದ ಹಲವಾರು ರೈತರಿಗೆ ಪಾವತಿ ಮಾಡಿರಲಿಲ್ಲ. ಆದರೆ ಕೃಷಿ ಸಚಿವ ಚಲುವ ರಾಯಸ್ವಾಮಿಅವರು ಕೇಂದ್ರಕ್ಕೆ ಈ ಸಂಬಂಧ ಮನವಿ ಮಾಡಿಕೊಂಡಿದ್ದರ ಪರಿಣಾಮ ಈಗ ಇಪ್ಪತ್ತ ಎರಡು ಸಾವಿರ ರೈತರಿಗೆ ಹಣ ಜಮೆ ಮಾಡಲು ಮುಂದಾಗಿದೆ.
ತಾಂತ್ರಿಕ ಕಾರಣಗಳಿಂದ ಪಿಎಂ ಕಿಸಾನ್‌ ಯೋಜನೆಯ ಹಣ ಹಾಕಿರಲಿಲ್ಲ. ಆದರೆ ಈಗ ಎಲ್ಲರಿಗೂ ಹಣ ಬಿಡುಗಡೆ ಮಾಡಲಾಗುತ್ತಿದೆ. 2025 ರ ಡಿಸೆಂಬರ್‌ 17 ರಂದು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಸಚಿವ ಚಲುವರಾಯಸ್ವಾಮಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.ಸುಮಾರು ಮೂವತ್ತು ಸಾವಿರಕ್ಕೂ ಅಧಿಕ ರೈತರಿಗೆ ಹಣ ಬಂದಿಲ್ಲ ಎಂದು ಹೇಳಿದ್ದರು.

ಇದಿಷ್ಟು ಮಾತ್ರವಲ್ಲದೆ ಕಳೆದ ವಾರ ನಡೆದ ಅಂತರಾಷ್ಟ್ರೀಯ ವಾಣಿಜ್ಯ ಮೇಳದಲ್ಲೂ ಸಹ ಕೇಂದ್ರ ಸಚಿವರಿಗೆ ಈ ಬಗ್ಗೆ ನೆನಪಿಸಿದ್ದರು. ಇದಕ್ಕೆ ಸ್ಪಂಧಿಸಿರುವ ಕೇಂದ್ರ 22 ಸಾವಿರಕ್ಕೂ ಹೆಚ್ಚು ಫಲಾನುಭವಿಗಳನ್ನು 22 ನೇ ಕಂತಿನ ಪಾವತಿ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಶೀಘ್ರದಲ್ಲೇ ಅವರಿಗೆ ಹಣ ಬಿಡುಗಡೆಯಾಗಲಿದೆ ಎಂದಿದ್ದಾರೆ.

ಫೆಬ್ರವರಿ ತಿಂಗಳಲ್ಲಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ರೈತರ ಖಾತೆಗಳಿಗೆ ಜಮಾ ಮಾಡುವ ಸಾಧ್ಯತೆಯಿದೆ ಎಂದು ಕೇಳಿಬರುತ್ತಿದೆ. ಪ್ರತಿ ವರ್ಷ, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿಯಲ್ಲಿ ರೈತರ ಖಾತೆಗಳಿಗೆ ತಲಾ 2,000 ರೂ.ಗಳ ಮೂರು ಕಂತುಗಳಲ್ಲಿ ಒಟ್ಟು 6,000 ರೂ.ಗಳನ್ನು ಜಮಾ ಮಾಡುತ್ತದೆ.

ಈ ಹಣವನ್ನು ನೇರವಾಗಿ ಫಲಾನುಭವಿಗಳಿಗೆ ವರ್ಗಾವಣೆ (DBT) ವಿಧಾನದ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ರೈತರು ಈ ಹಣವನ್ನು ಅವರು ಬಯಸಿದಂತೆ ಖರ್ಚು ಮಾಡಬಹುದು. ಈ ಹಣವನ್ನು ಕೃಷಿ ವೆಚ್ಚಗಳಿಗೆ ಅಥವಾ ಬೆಳೆ ಕೃಷಿ ವೆಚ್ಚಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಬಳಸಬಹುದು.

ರೈತರ ಆದಾಯವನ್ನು ಹೆಚ್ಚಿಸಲು ಕೇಂದ್ರದ ಮೋದಿ ಸರ್ಕಾರ ಈ ಯೋಜನೆಯನ್ನು ಲಭ್ಯಗೊಳಿಸಿದೆ. ಇಲ್ಲಿಯವರೆಗೆ, ಪಿಎಂ ಕಿಸಾನ್ ಯೋಜನೆಯಡಿಯಲ್ಲಿ, 2000 ರೂಪಾಯಿಗಳನ್ನು ರೈತರ ಖಾತೆಗಳಿಗೆ 22 ಕಂತುಗಳಲ್ಲಿ ಜಮಾ ಮಾಡಲಾಗಿದೆ, ಇದರಲ್ಲಿ ಪ್ರತಿ ಕಂತು 2000 ರೂಪಾಯಿಗಳು. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿಯಲ್ಲಿ ಒಟ್ಟು 10 ಕೋಟಿ ರೈತರು ಈ ಹಣವನ್ನು ಪಡೆಯುತ್ತಿದ್ದಾರೆ. ಮಹಿಳೆಯರು ಸಹ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಾಗಿರುವುದನ್ನು ಕಾಣಬಹುದು.

Pmkisan 21st instalment-ನನ್ನ ಖಾತೆಗೆ ಪಿಎಂ ಕಿಸಾನ್ 21ನೇ ಕಂತಿನ ಹಣ ಜಮಾ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/

ಮೊದಲು know your status ಮೇಲೆ ಕ್ಲಿಕ್ ಮಾಡಿ

ನಂತರ know your register number ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ

ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.

ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ

ನಂತರ update your details ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ

 Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.

ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ

Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.

FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ  ಕಾರಣ ಮತ್ತು ಪರಿಹಾರ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

fruitspmk.gov.in ಪೋರ್ಟಲ್ ನಲ್ಲಿ

1

ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ

ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು                                                                     ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು

ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ  (NIC)                     ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ.            ಆ) ಸಮಸ್ಯಾತ್ಮಕ  ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ.

2

ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು

ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ

ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ    ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ

3

ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು

 ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ

ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ   ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ

4

ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ

ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ

OPERATOR ಲಾಗಿನ್ (RSK, ADA office, JDA office)  OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು

5

01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ

ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ

ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ)

6

Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು

ಜಿಲ್ಲೆಗಳಲ್ಲಿ  OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ

AAO ಲಾಗಿನ್  (RSK, ADA office, JDA office)  AAO ಲಾಗಿನ್ನಲ್ಲಿ  ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ,  ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

7

ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ

ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ)

AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.

8

PFMS rejected

Aadhaar Number is not seeded in NPCI

ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ

Bank Name And IFSC Code are not related to each other

ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ

Bank Name is not as per PFMS Bank Master.

Beneficiary is rejected as Account Type is other than SB / SBA / JD

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ)

Duplicate Beneficiary Name , Bank Account No and Bank Name not allowed for same scheme

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

IFSC Code  either not present or currently inactive in tbl BankBranch

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

Incorrect Aadhaar Number

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

One or more mandatory tags values are missing.

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

Rejected by Bank, Account No does not exist in Bank/INVALID/CLOSED

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

9

Amount credited to Account Number-NA

Aadhaar number based payment by GoI

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ.

10

PAYMENT STOPPED BY STATE

 XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳಿದ್ದರೆ ಕೇಂದ್ರ ಕಚೇರಿ ಮಾಹಿತಿ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

11

Transaction failed

ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ.

12

ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ

OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳ   ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

13

ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು

ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ.

ಕೇಂದ್ರ ಸರ್ಕಾರ ದ   pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ.

]]>
Mon, 16 Feb 2026 07:57:32 +0530 shivuagrico
Maize DBT&ಮೆಕ್ಕೆಜೋಳ ಬೆಳೆಗಾರರಿಗೆ 250 ರೂಪಾಯಿ ಆರ್ಥಿಕ ನೆರವು ಜಮಾ ಪ್ರಾರಂಭ,ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ https://krushirushi.in/Maize-DBT-250 https://krushirushi.in/Maize-DBT-250 Maize support price-ಮೆಕ್ಕೆಜೋಳ ಬೆಳೆಗಾರರಿಗಾಗಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ; ಬೆಲೆ ಕುಸಿತಕ್ಕೆ ಬ್ರೇಕ್

ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಖಾರಿಫ್ ಹಂಗಾಮಿನ ಮೆಕ್ಕೆಜೋಳ ಬೆಳೆಗಾರರಿಗಾಗಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯನ್ನು ಜಾರಿಗೆ ತಂದಿದೆ. ದಾಖಲೆ ಪ್ರಮಾಣದ ಉತ್ಪಾದನೆಯಿಂದ ಬೆಲೆ ಕುಸಿತ ಎದುರಿಸುತ್ತಿರುವ ರೈತರಿಗೆ ಪ್ರತಿ ಕ್ವಿಂಟಾಲ್‌ಗೆ 2,150 ರೂ. ನಿಗದಿತ ದರ ನಿಗದಿಪಡಿಸಲಾಗಿದೆ. ಮಾರುಕಟ್ಟೆ ದರ 1,900 ರೂ.ಗಿಂತ ಕಡಿಮೆಯಾದರೆ 250 ರೂ.ವರೆಗೆ ಬೆಲೆ ವ್ಯತ್ಯಾಸ ಪರಿಹಾರ ಧನ ದೊರೆಯಲಿದೆ. ಈ ಯೋಜನೆಯಿಂದ 10 ಲಕ್ಷಕ್ಕೂ ಹೆಚ್ಚು ರೈತರು ಪ್ರಯೋಜನ ಪಡೆಯಲಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.

ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಖಾರಿಫ್ ಹಂಗಾಮಿನ ಮೆಕ್ಕೆಜೋಳ ಬೆಳೆಗಾರರಿಗೆ ನೆರವಾಗಲು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯನ್ನು ಜಾರಿಗೊಳಿಸಿದೆ. ರಾಜ್ಯದಲ್ಲಿ ಈ ಬಾರಿ ದಾಖಲೆ ಪ್ರಮಾಣದ ಮೆಕ್ಕೆಜೋಳ ಉತ್ಪಾದನೆಯಾಗಿದ್ದು, ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರಿಗೆ ಈ ಯೋಜನೆ ಆಸರೆಯಾಗಲಿದೆ. ಈ ಯೋಜನೆಯಿಂದ ರಾಜ್ಯದಲ್ಲಿನ 10 ಲಕ್ಷಕ್ಕೂ ಹೆಚ್ಚಿನ ಮೆಕ್ಕೆಜೋಳ ಬೆಳೆಗಾರರಿಗೆ ಅನುಕೂಲವಾಗಲಿದೆ. ರಾಜ್ಯದ ಮೆಕ್ಕೆಜೋಳ ಬೆಳೆಗಾರರು ಎದುರಿಸುತ್ತಿರುವ 'ಬೆಲೆ ಕುಸಿತ' ಮತ್ತು 'ಸಂಕಷ್ಟದ ಮಾರಾಟ'ವನ್ನು ತಡೆಯಲು ಸರ್ಕಾರವು ಪ್ರತಿ ಕ್ವಿಂಟಾಲ್‌ಗೆ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆಯನ್ನು ನಿಗದಿಪಡಿಸಿದೆ.

ಏನಿದು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ?

ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಖಾರಿಫ್ ಹಂಗಾಮಿನ ಮೆಕ್ಕೆಜೋಳ ಬೆಳೆಗಾರರಿಗೆ ನೆರವಾಗಲು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ ಜಾರಿಗೆ ತಂದಿದ್ದು, ಪ್ರತಿ ಕ್ವಿಂಟಾಲ್‌ಗೆ 2,150 ರೂ. ನಿಗದಿತ ದರ ನಿಗದಿಪಡಿಸಿದೆ. ಮಾರುಕಟ್ಟೆ ದರವು 1,900 ರೂ. ಅಥವಾ ಅದಕ್ಕಿಂತ ಕಡಿಮೆಯಾದಲ್ಲಿ ರೈತರಿಗೆ ಪ್ರತಿ ಕ್ವಿಂಟಾಲ್‌ಗೆ 250 ರೂ.ವರೆಗೆ ಬೆಲೆ ವ್ಯತ್ಯಾಸದ ಪರಿಹಾರ ಧನ ದೊರೆಯಲಿದೆ. ಮಾರುಕಟ್ಟೆ ಬೆಲೆ ಏರಿಕೆಯಾದಂತೆ ಈ ಪರಿಹಾರದ ಮೊತ್ತವು ಕಡಿಮೆಯಾಗುತ್ತಾ ಹೋಗುತ್ತದೆ ಮತ್ತು ನಿಗದಿತ ಬೆಲೆಯನ್ನು ತಲುಪಿದಾಗ ಸ್ಥಗಿತಗೊಳ್ಳುತ್ತದೆ. ಆದರೆ ರಾಜ್ಯದ ಸಾಮಾನ್ಯ ಸಂಗ್ರಹಣೆ ಯೋಜನೆಯಡಿ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ 2,400 ರೂ.ಕನಿಷ್ಠ ಬೆಂಬಲ ಬೆಲೆ ಲಭ್ಯವಿರುತ್ತದೆ. ಈ ಯೋಜನೆಯು ನಿಯೋಜಿತ ಎಪಿಎಂಸಿ ಮತ್ತು ಉಪ-ಮಾರುಕಟ್ಟೆ ಯಾರ್ಡ್‌ಗಳಲ್ಲಿ ಏಕೀಕೃತ ಮಾರುಕಟ್ಟೆ ವೇದಿಕೆ ಮೂಲಕ ಮಾರಾಟವಾಗುವ ಗರಿಷ್ಠ ನಾಲ್ಕು ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಒಳಗೊಳ್ಳಲಿದ್ದು, ಪ್ರತಿ ರೈತರಿಗೆ ಗರಿಷ್ಠ 50 ಕ್ವಿಂಟಾಲ್ ಅಥವಾ ಪ್ರತಿ ಎಕರೆಗೆ ಗರಿಷ್ಠ 12 ಕ್ವಿಂಟಾಲ್ ಮಿತಿಯವರೆಗೆ ಮಾತ್ರ ಸೌಲಭ್ಯ ಸಿಗಲಿದೆ. ಕಡ್ಡಾಯ ಗುಣಮಟ್ಟದ ತಪಾಸಣೆ ಮತ್ತು ದಾಖಲೆಗಳ ಪರಿಶೀಲನೆಯ ನಂತರ ಪರಿಹಾರದ ಮೊತ್ತವನ್ನು ನೇರ ನಗದು ವರ್ಗಾವಣೆ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.

 

ಬೆಲೆ ಮತ್ತು ಪರಿಹಾರದ ವಿವರಗಳು

  • ಪ್ರಸ್ತುತ ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ ಬೆಲೆಯು ಪ್ರತಿ ಕ್ವಿಂಟಾಲ್‌ಗೆ 1,600 ರೂ. ದಿಂದ 2,000 ರೂ. ರಷ್ಟಿದ್ದು, ಇದು ರೈತರಿಗೆ ಆರ್ಥಿಕ ನಷ್ಟ ಉಂಟುಮಾಡುತ್ತಿದೆ.
  • ಈ ನಷ್ಟವನ್ನು ಸರಿದೂಗಿಸಲು ಸರ್ಕಾರವು ಪ್ರತಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ ₹2,150 ರಂತೆ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆಯನ್ನು ನಿಗದಿಪಡಿಸಿದೆ.
  • ಮಾರುಕಟ್ಟೆಯ ಸರಾಸರಿ ಮಾದರಿ ಬೆಲೆಯು 1,900 ರೂ. ಅಥವಾ ಅದಕ್ಕಿಂತ ಕಡಿಮೆ ಇದ್ದಾಗ, ರೈತರಿಗೆ ಪ್ರತಿ ಕ್ವಿಂಟಾಲ್‌ಗೆ ಗರಿಷ್ಠ 250 ರೂ. ವರೆಗೆ ಬೆಲೆ ವ್ಯತ್ಯಾಸದ ಪರಿಹಾರವನ್ನು ನೀಡಲಾಗುತ್ತದೆ.
  • ಮಾರುಕಟ್ಟೆ ಬೆಲೆಯು 1,900 ರೂ. ಕ್ಕಿಂತ ಹೆಚ್ಚಾದಂತೆ ಪರಿಹಾರದ ಮೊತ್ತವು ಹಂತ-ಹಂತವಾಗಿ ಕಡಿಮೆಯಾಗುತ್ತಾ ಹೋಗುತ್ತದೆ.
  • ಒಂದು ವೇಳೆ ಮಾರುಕಟ್ಟೆ ಬೆಲೆಯು ನಿಗದಿತ ದರವಾದ 2,150 ರೂ. ಅಥವಾ ಅದಕ್ಕಿಂತ ಹೆಚ್ಚಿದ್ದರೆ, ಈ ಯೋಜನೆಯಡಿ ಯಾವುದೇ ಪರಿಹಾರ ಅನ್ವಯಿಸುವುದಿಲ್ಲ.
  • ಅರ್ಹ ರೈತರಿಗೆ ಸಿಗಬೇಕಾದ ಈ ಬೆಲೆ ವ್ಯತ್ಯಾಸದ ಮೊತ್ತವನ್ನು ನೇರ ನಗದು ವರ್ಗಾವಣೆ ಮೂಲಕ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.

ಪ್ರಸ್ತುತ ಮಾರುಕಟ್ಟೆ ಸ್ಥಿತಿಗತಿ ಏನು?

  • ಕರ್ನಾಟಕ ರಾಜ್ಯದಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಮೆಕ್ಕೆಜೋಳದ ಉತ್ಪಾದನೆಯಾಗಿದ್ದು, ಒಟ್ಟು 17.64 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಈ ಬೆಳೆಯನ್ನು ಬೆಳೆಯಲಾಗಿದೆ.
  • ಪ್ರಸಕ್ತ ಸಾಲಿನಲ್ಲಿ ಒಟ್ಟು ಮೆಕ್ಕೆಜೋಳದ ಉತ್ಪಾದನೆಯು 53.80 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಆಗಬಹುದು ಎಂದು ಅಂದಾಜಿಸಲಾಗಿದೆ.
  • 2025ರ ಆಗಸ್ಟ್‌ನಿಂದ ಡಿಸೆಂಬರ್ ತಿಂಗಳ ಅವಧಿಯಲ್ಲಿಯೇ ಸುಮಾರು 20.50 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಮೆಕ್ಕೆಜೋಳವು ವಿವಿಧ ಎಪಿಎಂಸಿ ಮಾರುಕಟ್ಟೆಗಳಿಗೆ ಬಂದಿದೆ.
  • ಈ ಅವಧಿಯಲ್ಲಿ ಮಾರುಕಟ್ಟೆಗೆ ಬಂದಿರುವ ಮೆಕ್ಕೆಜೋಳದ ಪ್ರಮಾಣವು ರಾಜ್ಯದ ಒಟ್ಟು ಅಂದಾಜು ಉತ್ಪಾದನೆಯ ಶೇಕಡಾ 38ಕ್ಕಿಂತಲೂ ಅಧಿಕವಾಗಿದೆ.
  • ಉತ್ಪಾದನೆಯಲ್ಲಿನ ಈ ಭಾರಿ ಏರಿಕೆಯೇ ಮಾರುಕಟ್ಟೆಯಲ್ಲಿ ಬೆಲೆ ಕುಸಿತಕ್ಕೆ ಪ್ರಮುಖ ಕಾರಣವಾಗಿದ್ದು, ರೈತರು ಸಂಕಷ್ಟ ಎದುರಿಸುವಂತಾಗಿದೆ.
  • ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮೆಕ್ಕೆಜೋಳವನ್ನು ಬೆಳೆಯಲಾಗುತ್ತದೆಯಾದರೂ, ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಇದರ ಸಾಂದ್ರತೆ ಹೆಚ್ಚಾಗಿದೆ.
  • ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳು ಮೆಕ್ಕೆಜೋಳ ಬೆಳೆಯುವ ಪ್ರಮುಖ ಕೇಂದ್ರಗಳಾಗಿವೆ.
  • ಮಧ್ಯ ಮತ್ತು ದಕ್ಷಿಣ ಕರ್ನಾಟಕ ಭಾಗದಲ್ಲಿ ದಾವಣಗೆರೆ, ಹಾವೇರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಈ ಬೆಳೆಯನ್ನು ವ್ಯಾಪಕವಾಗಿ ಬೆಳೆಯಲಾಗುತ್ತದೆ.
  • ಅದರಲ್ಲೂ ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳು ರಾಜ್ಯದ ಪ್ರಮುಖ ಮೆಕ್ಕೆಜೋಳದ ಮಾರುಕಟ್ಟೆ ಕೇಂದ್ರಗಳಾಗಿ ಗುರುತಿಸಿಕೊಂಡಿವೆ.

ಯೋಜನೆಯ ಅರ್ಹತೆ ಮತ್ತು ಮಿತಿಗಳು

  • ಒಬ್ಬ ರೈತರು ಈ ಯೋಜನೆಯ ಮೂಲಕ ಗರಿಷ್ಠ 50 ಕ್ವಿಂಟಾಲ್‌ ಮೆಕ್ಕೆಜೋಳಕ್ಕೆ ಮಾತ್ರ ಬೆಲೆ ವ್ಯತ್ಯಾಸದ ಪರಿಹಾರವನ್ನು ಪಡೆಯಲು ಅವಕಾಶವಿದೆ.
  • ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ, ಪ್ರತಿ ಎಕರೆಗೆ ಗರಿಷ್ಠ 12 ಕ್ವಿಂಟಾಲ್‌ ಮೆಕ್ಕೆಜೋಳವನ್ನು ಮಾತ್ರ ಯೋಜನೆಯಡಿ ಪರಿಗಣಿಸಲಾಗುತ್ತದೆ.
  • ರಾಜ್ಯಾದ್ಯಂತ ಒಟ್ಟಾರೆಯಾಗಿ ಗರಿಷ್ಠ 4 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳದ ವಹಿವಾಟಿಗೆ ಮಾತ್ರ ಈ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯ ಲಾಭ ಸಿಗಲಿದೆ.
  • ಈ ಮಿತಿಗಳನ್ನು ವಿಧಿಸುವ ಮೂಲಕ ಸರ್ಕಾರವು ಹೆಚ್ಚಿನ ಸಂಖ್ಯೆಯ ಸಣ್ಣ ರೈತರಿಗೆ ಯೋಜನೆಯ ಪ್ರಯೋಜನ ತಲುಪುವಂತೆ ಗುರಿ ಹೊಂದಿದೆ.
  • ಅರ್ಹ ಫಲಾನುಭವಿಗಳನ್ನು ಗುರುತಿಸಲು ರೈತರ ಭೂ ದಾಖಲೆಗಳನ್ನು ಫ್ರೂಟ್ಸ್‌ ತಂತ್ರಾಂಶದ ಮೂಲಕ ಕಡ್ಡಾಯವಾಗಿ ಪರಿಶೀಲಿಸಲಾಗುತ್ತದೆ.

ಯಾರಿಗೆ ಈ ಯೋಜನೆ ಅನ್ವಯಿಸುವುದಿಲ್ಲ?

  • ಎಥೆನಾಲ್ ಉತ್ಪಾದನಾ ಘಟಕಗಳಿಗೆ ಮೆಕ್ಕೆಜೋಳವನ್ನು ಪೂರೈಕೆ ಮಾಡಿದ ರೈತರಿಗೆ ಈ ಯೋಜನೆಯಡಿ ಪರಿಹಾರ ಧನ ಅನ್ವಯಿಸುವುದಿಲ್ಲ.
  • ಕೋಳಿ ಆಹಾರ ಅಥವಾ ಜಾನುವಾರು ಆಹಾರ ತಯಾರಿಕಾ ಘಟಕಗಳಿಗೆ ನೇರವಾಗಿ ಮೆಕ್ಕೆಜೋಳವನ್ನು ಮಾರಾಟ ಮಾಡಿದ ರೈತರನ್ನು ಈ ಯೋಜನೆಯಿಂದ ಹೊರಗಿಡಲಾಗಿದೆ.
  • ಕರ್ನಾಟಕ ಹಾಲು ಮಹಾಮಂಡಳಿ ಅಥವಾ ಅದರ ಒಕ್ಕೂಟಗಳಿಗೆ ಮೆಕ್ಕೆಜೋಳ ಪೂರೈಸಿದ ರೈತರು ಕೂಡ ಈ ಸೌಲಭ್ಯ ಪಡೆಯಲು ಅರ್ಹರಲ್ಲ.
  • ಈ ಮೇಲಿನ ಸಂಸ್ಥೆಗಳಿಗೆ ಈಗಾಗಲೇ ಪೂರೈಕೆ ಮಾಡಿರುವ ರೈತರಿಗೆ ಸರ್ಕಾರದ ಈ ಬೆಲೆ ವ್ಯತ್ಯಾಸದ ಪರಿಹಾರ ಧನ ದೊರೆಯುವುದಿಲ್ಲ ಎಂದು ಅಧಿಕೃತವಾಗಿ ತಿಳಿಸಲಾಗಿದೆ.

ಅನುಷ್ಠಾನ ಪ್ರಕ್ರಿಯೆ ಮತ್ತು ನೋಂದಣಿ ಹೇಗೆ?

  • ಈ ಯೋಜನೆಯನ್ನು ಸಂಪೂರ್ಣವಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ವತಿಯಿಂದ ಜಾರಿಗೊಳಿಸಲಾಗುತ್ತದೆ.
  • ನೋಂದಣಿಗಾಗಿ ಮೊದಲಿಗೆ, ರೈತರು ಕರ್ನಾಟಕ ಸರ್ಕಾರದ ಅಧಿಕೃತ ಕರ್ನಾಟಕ ಕಿಸಾನ್ ಪೋರ್ಟಲ್‌ kkisan.karnataka.gov.in/ ಗೆ ಭೇಟಿ ನೀಡಬೇಕು.
  • ಪೋರ್ಟಲ್‌ನಲ್ಲಿ ಲಭ್ಯವಿರುವ "ರೈತರ ನೋಂದಣಿ" ಅಥವಾ ಸಂಬಂಧಿತ ಯೋಜನೆಯ ಲಿಂಕ್ ಅನ್ನು ಹುಡುಕಿ ಅದರ ಮೇಲೆ ಕ್ಲಿಕ್ ಮಾಡಬೇಕು.
  • ನಂತರ, NeML ವೇದಿಕೆಯ ಮೂಲಕ ನಿಮ್ಮ ಆಧಾರ್ ಕಾರ್ಡ್ ಬಳಸಿ ಬಯೋಮೆಟ್ರಿಕ್ ದೃಢೀಕರಣ ಅಥವಾ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
  • ನಿಮ್ಮ ಜಮೀನಿನ ಮಾಹಿತಿ ಸರಿಯಾಗಿರುವುದನ್ನು ಖಚಿತಪಡಿಸಿಕೊಳ್ಳಲು, FRUITS ತಂತ್ರಾಂಶದಲ್ಲಿ ದಾಖಲಾಗಿರುವ ಭೂ ದಾಖಲೆಗಳನ್ನು ನಿಮ್ಮ ಕಿಸಾನ್‌ ಪ್ರೊಫೈಲ್‌ಗೆ ಲಿಂಕ್ ಮಾಡಲಾಗಿದೆಯೇ ಎಂದು ಪರಿಶೀಲಿಸಿಕೊಳ್ಳಿ.
  • ಮಾರುಕಟ್ಟೆಗೆ ತರುವ ಮೆಕ್ಕೆಜೋಳದ ಗುಣಮಟ್ಟವನ್ನು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ನೇಮಿಸಿದ ತಾಂತ್ರಿಕ ಅಧಿಕಾರಿಗಳು ಕಡ್ಡಾಯವಾಗಿ ತಪಾಸಣೆ ಮಾಡುತ್ತಾರೆ.
  • ಈ ಪ್ರಕ್ರಿಯೆಯು ಪಾರದರ್ಶಕತೆಯಿಂದ ಕೂಡಿರಲು ಭೂ ದಾಖಲೆ ಮತ್ತು ಬೆಳೆ ಸಮೀಕ್ಷೆಯ ದತ್ತಾಂಶಗಳ ತಾಳೆ ನೋಡುವುದು ಅತ್ಯಂತ ಅವಶ್ಯಕವಾಗಿದೆ.
  • ಅಂತಿಮವಾಗಿ, ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು; ತದನಂತರ ಅಧಿಕಾರಿಗಳು ಭೂ ದಾಖಲೆಗಳು, ಆಧಾರ್ ಮತ್ತು ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ಆಧರಿಸಿ ನಿಮ್ಮ ಅರ್ಜಿಯನ್ನು ಪರಿಶೀಲಿಸುತ್ತಾರೆ.
  • ರೈತರಿಗೆ ಸಿಗಬೇಕಾದ ಪರಿಹಾರದ ಮೊತ್ತವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗುತ್ತದೆ.



ಆಡಳಿತಾತ್ಮಕ ಮೇಲ್ವಿಚಾರಣೆ

ಜಿಲ್ಲಾಧಿಕಾರಿಗಳು ಈ ಯೋಜನೆಯ ಸಂಪೂರ್ಣ ಉಸ್ತುವಾರಿ ವಹಿಸಲಿದ್ದು, ಮಾರುಕಟ್ಟೆಗೆ ಬರುವ ಮೆಕ್ಕೆಜೋಳದ ದೈನಂದಿನ ವರದಿ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುತ್ತಾರೆ. ಏಕೀಕೃತ ಮಾರುಕಟ್ಟೆ ವೇದಿಕೆಯಲ್ಲಿ ಮೊದಲ ವಹಿವಾಟು ನಡೆದ ದಿನದಿಂದ ಒಂದು ತಿಂಗಳ ಕಾಲ ಈ ಯೋಜನೆ ಚಾಲ್ತಿಯಲ್ಲಿರುತ್ತದೆ. ಯೋಜನೆ ಮುಗಿದ ಎರಡು ತಿಂಗಳೊಳಗೆ ಸಮಗ್ರ ಲೆಕ್ಕಪರಿಶೋಧನೆ ನಡೆಸಲಾಗುವುದು.

Maize DBT-ಮೆಕ್ಕೆಜೋಳ ಬೆಳೆಗಾರರಿಗೆ 250 ರೂಪಾಯಿ ಆರ್ಥಿಕ ನೆರವು ಜಮಾ ಪ್ರಾರಂಭ,ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಮೆಕ್ಕೆಜೋಳ ಬೆಳೆಗಾರರಿಗೆ ಆರ್ಥಿಕ ನೆರವು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಯಾವ ಯೋಜನೆಯಡಿ ಎಷ್ಟು ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Wed, 11 Feb 2026 08:32:08 +0530 shivuagrico
Bele vime&ಈ ಜಿಲ್ಲೆಯ 7880 ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ https://krushirushi.in/Bele-vime-2026 https://krushirushi.in/Bele-vime-2026 Bele vime-ಈ ಜಿಲ್ಲೆಯ 7880 ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ 

ಚಿತ್ರದುರ್ಗ (Chitradurga) ಜಿಲ್ಲೆಯ ರೈತರು 2025ರ ಖರೀಫ್ ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿಗೊಳಗಾಗಿದ್ದರು. ಈ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ (Pradhan Mantri Fasal Bima Yojana) ಅಡಿಯಲ್ಲಿ ಸುಮಾರು 7,880 ರೈತರಿಗೆ ಒಟ್ಟು 12.40 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು (Crop Insurance Compensation) ಬಿಡುಗಡೆ ಮಾಡಲಾಗಿದೆ.

ಸಂಸದ ಗೋವಿಂದ ಕಾರಜೋಳ (Govinda Karajola) ಅವರು ಲೋಕಸಭೆಯಲ್ಲಿ ಕೇಳಿದ ಚುಕ್ಕೆರಹಿತ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವ ಆರ್.ಎನ್.ಕೆ. ಠಾಕೂರ್ ಅವರು ಲಿಖಿತ ಉತ್ತರ ನೀಡಿದ್ದಾರೆ. ಈ ಉತ್ತರದಲ್ಲಿ 2016ರಿಂದ ಕರ್ನಾಟಕದಲ್ಲಿ ಯಶಸ್ವಿಯಾಗಿ ಜಾರಿಯಲ್ಲಿದ್ದು, ಇದುವರೆಗೆ ರಾಜ್ಯದ 1.34 ಕೋಟಿ ಅರ್ಜಿಗಳಿಗೆ ಒಟ್ಟು 18,783 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು ರೈತರಿಗೆ ಪಾವತಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಬಿಡುಗಡೆಯಾದ 12.40 ಕೋಟಿ ರೂ. ಪರಿಹಾರವು ಸಂಕಷ್ಟದಲ್ಲಿರುವ ರೈತ ಕುಟುಂಬಗಳಿಗೆ ಮಹತ್ವದ ಆರ್ಥಿಕ ನೆರವಾಗಿದ್ದು, ಅವರ ಜೀವನೋಪಾಯಕ್ಕೆ ಹೊಸ ಭರವಸೆ ನೀಡಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

ಅದೇ ರೀತಿ ನಿಮ್ಮ ಜಿಲ್ಲೆಯಲ್ಲಿ ನಿಮಗೇಷ್ಟು ಬೆಳೆವಿಮೆ ಜಮಾ ಆಗಿದೆ ಚೆಕ್ ಮಾಡಿ

 ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2025-26" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Wed, 04 Feb 2026 20:25:01 +0530 shivuagrico
SSLC exams&2026 ಎಸ್‌ಎಸ್‌ಎಲ್‌ಸಿ ಟಾಪರ್‌ಗಳಿಗೆ ಸಿಗಲಿದೆ 50,000 ರೂ. ನಗದು ಬಹುಮಾನ https://krushirushi.in/SSLC-exams-2026 https://krushirushi.in/SSLC-exams-2026 SSLC exams-2026 ಎಸ್‌ಎಸ್‌ಎಲ್‌ಸಿ ಟಾಪರ್‌ಗಳಿಗೆ ಸಿಗಲಿದೆ 50,000 ರೂ. ನಗದು ಬಹುಮಾನ

ರಾಜ್ಯದ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹ ನೀಡಲು ಲ್ಯಾಪ್‌ಟಾಪ್‌ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿದ್ದ ಕರ್ನಾಟಕ ಸರ್ಕಾರವು ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರೋತ್ಸಾಹದಾಯಕ ಕ್ರಮಗಳಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಲ್ಯಾಪ್‌ಟಾಪ್ ಬದಲಿಗೆ ಈಗ ನೇರವಾಗಿ 50,000 ರೂ. ನಗದು ಬಹುಮಾನ ನೀಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಯಲ್ಲಿ ಆಗಿರುವ ಬದಲಾವಣೆಗಳು ಏನು? ಈ ಯೋಜನೆಗೆ ಯಾರೆಲ್ಲಾ ಅರ್ಹರು? ಇತ್ಯಾದಿ ಮಾಹಿತಿಗಳು ಇಲ್ಲಿವೆ.

ಲ್ಯಾಪ್‌ಟಾಪ್‌ ಬದಲು ನಗದು ಬಹುಮಾನ ಯೋಜನೆ ಜಾರಿ ಏಕೆ?

ಕರ್ನಾಟಕ ಸರ್ಕಾರವು ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಲು ಮತ್ತು ತಂತ್ರಜ್ಞಾನದ ಅರಿವು ಮೂಡಿಸಲು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲಾ ಹಾಗೂ ಬ್ಲಾಕ್ ಮಟ್ಟದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ತಲಾ ಮೂವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸುವ ಮಹತ್ತರ ಯೋಜನೆಯನ್ನು ಜಾರಿಗೆ ತಂದಿತ್ತು. ಕರ್ನಾಟಕ ಸರ್ಕಾರವು ಸರ್ಕಾರಿ ಶಾಲಾ ಎಸ್‌ಎಸ್‌ಎಲ್‌ಸಿ ಟಾಪರ್‌ಗಳಿಗೆ ನೀಡುತ್ತಿದ್ದ ಪ್ರೋತ್ಸಾಹಕ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ಈ ಹಿಂದೆ ನೀಡಲಾಗುತ್ತಿದ್ದ ಲ್ಯಾಪ್‌ಟಾಪ್‌ಗಳ ಬದಲಿಗೆ ಈಗ 50,000 ರೂ. ನಗದು ಬಹುಮಾನವನ್ನು ನೀಡಲು ನಿರ್ಧರಿಸಿದೆ. ಈ ಹೊಸ ನಿಯಮದಂತೆ, ಪ್ರತಿ ಶೈಕ್ಷಣಿಕ ಜಿಲ್ಲೆಯ ಮೊದಲ ಮೂರು ಸ್ಥಾನ ಪಡೆದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ಹಣವನ್ನು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಲ್ಯಾಪ್‌ಟಾಪ್‌ಗಳ ಖರೀದಿ ಮತ್ತು ವಿತರಣೆಯಲ್ಲಿನ ವಿಳಂಬ ಹಾಗೂ ತಾಂತ್ರಿಕ ಸವಾಲುಗಳನ್ನು ನಿವಾರಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳು ಈ ಹಣವನ್ನು ತಮ್ಮ ಇಚ್ಛೆಯಂತೆ ಮುಂದಿನ ಶಿಕ್ಷಣದ ಶುಲ್ಕ, ಪುಸ್ತಕಗಳು ಅಥವಾ ಅವರಿಗೆ ಬೇಕಾದ ಕಂಪನಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ಖರೀದಿಸಲು ಬಳಸುವ ಮೂಲಕ ಹೆಚ್ಚಿನ ಶೈಕ್ಷಣಿಕ ಸ್ವಾತಂತ್ರ್ಯವನ್ನು ಪಡೆಯಲಿದ್ದಾರೆ. ಈ ಸಬಂಧ ಜ.22 ರಂದು ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

 

ಬದಲಾವಣೆಗೆ ಕಾರಣಗಳೇನು?

  • ಅರ್ಹತೆ ಪಡೆದ ಪ್ರತಿಯೊಬ್ಬ ವಿದ್ಯಾರ್ಥಿಗೂ ತಲಾ 50,000 ರೂ. ನಗದು ಬಹುಮಾನವನ್ನು ನೀಡಲಾಗುತ್ತದೆ.
  • ಜಿಲ್ಲಾ ಮಟ್ಟದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಮೊದಲ ಮೂರು ಸ್ಥಾನಗಳನ್ನು ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮಾತ್ರ ಈ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ.
  • ಈ ಯೋಜನೆಯಲ್ಲಿ ಪಾರದರ್ಶಕತೆ ಕಾಪಾಡಲು, ಬಹುಮಾನದ ಮೊತ್ತವನ್ನು ವಿದ್ಯಾರ್ಥಿಗಳ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗುತ್ತದೆ.
  • ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಜ್ಯಾದ್ಯಂತ ಒಟ್ಟು 758 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಈ ಪ್ರಯೋಜನಕ್ಕಾಗಿ ಗುರುತಿಸಲಾಗಿದೆ.
  • ಲ್ಯಾಪ್‌ಟಾಪ್ ಬದಲಿಗೆ ನಗದು ನೀಡುವ ಈ ನಿರ್ಧಾರವು ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಅಗತ್ಯಗಳಿಗೆ ತಕ್ಕಂತೆ ಹಣವನ್ನು ಬಳಸಿಕೊಳ್ಳಲು ಹೆಚ್ಚಿನ ಸ್ವಾತಂತ್ರ್ಯವನ್ನು ನೀಡುತ್ತದೆ.

ಅರ್ಹತಾ ಮಾನದಂಡಗಳೇನು?

  • ಈ ಯೋಜನೆಯು ಕೇವಲ ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ. ಖಾಸಗಿ ಅಥವಾ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಇದು ಅನ್ವಯಿಸುವುದಿಲ್ಲ.
  • ಅಭ್ಯರ್ಥಿಯು ಜಿಲ್ಲಾ ಮಟ್ಟದಲ್ಲಿ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಮೊದಲ ಮೂರು ಸ್ಥಾನಗಳಲ್ಲಿ ಒಬ್ಬರಾಗಿರಬೇಕು.
  • ವಿದ್ಯಾರ್ಥಿಯ ಸಂಪೂರ್ಣ ಶೈಕ್ಷಣಿಕ ಮಾಹಿತಿಯು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಕಡ್ಡಾಯವಾಗಿ ದಾಖಲಾಗಿರಬೇಕು.
  • ಅರ್ಹ ವಿದ್ಯಾರ್ಥಿಯ ಹೆಸರಿನಲ್ಲಿಯೇ ಬ್ಯಾಂಕ್ ಖಾತೆ ಇರಬೇಕು ಮತ್ತು ಆ ಖಾತೆಯು ಕಡ್ಡಾಯವಾಗಿ ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಆಗಿರಬೇಕು

ನಗದು ಬಹುಮಾನ ನೀಡಿಕೆ ಹೇಗೆ?

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಅರ್ಹ ಫಲಾನುಭವಿಗಳನ್ನು ಶಿಕ್ಷಣ ಇಲಾಖೆಯ ಕಛೇರಿಯಿಂದಲೇ ನೇರವಾಗಿ ಗುರುತಿಸಲಾಗುತ್ತದೆ. ಹೀಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆಯಾ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ಸೌಲಭ್ಯವನ್ನು ವಿತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದರೊಂದಿಗೆ, ಪ್ರತಿಭಾವಂತ ವಿದ್ಯಾರ್ಥಿಗಳು ಈ ಸೌಲಭ್ಯಕ್ಕಾಗಿ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿಯೂ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಸರ್ಕಾರವು ಈ ಯೋಜನೆಗಾಗಿ ಪ್ರತ್ಯೇಕ ಆನ್‌ಲೈನ್ ಅರ್ಜಿ ನಮೂನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ dce.karnataka.gov.in ನಲ್ಲಿ ಲಭ್ಯವಾಗುವಂತೆ ಮಾಡಿದೆ. ಉನ್ನತ ಶಿಕ್ಷಣದ ಉದ್ದೇಶಕ್ಕಾಗಿ ಈ ಸೌಲಭ್ಯವನ್ನು ಬಯಸುವ ಯಾವುದೇ ಅರ್ಹ ವಿದ್ಯಾರ್ಥಿಯು ಈ ಜಾಲತಾಣದ ಮೂಲಕ ಸುಲಭವಾಗಿ ನೋಂದಾಯಿಸಿಕೊಳ್ಳಬಹುದು.

]]>
Mon, 02 Feb 2026 12:49:08 +0530 shivuagrico
Gruhalakshmi list&ಕೊನೆಗೂ ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಗಲಿದೆ 2 ತಿಂಗಳ ಗೃಹಲಕ್ಷ್ಮಿ ಹಣ https://krushirushi.in/Gruhalakshmi-list-2415 https://krushirushi.in/Gruhalakshmi-list-2415 Gruhalakshmi list-ಕೊನೆಗೂ ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಯ್ತು 2 ತಿಂಗಳ ಗೃಹಲಕ್ಷ್ಮಿ ಹಣ

ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಳ‌ರ್, ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 24 ಕಂತಿನ ಹಣ ಬಿಡುಗಡೆ ಮಾಡಲಾಗಿದೆ

ಇದೀಗ ಮತ್ತೆ ಎರಡು ಕಂತು ಹಣ ಬಿಡುಗಡೆ ಮಾಡುತ್ತಿದ್ದೇವೆ ಈ ಮೂಲಕ ಗೃಹಲಕ್ಷ್ಮಿಯೋಜನೆಯಡಿ ಒಟ್ಟು 26 ಕಂತಿನಲ್ಲಿ 52 ಸಾವಿರ ರೂಪಾಯಿ ಫಲಾನುಭವಿಗಳಿಗೆ ನೀಡಿದಂತಾಗುತ್ತದೆ ಎಂದು ತಿಳಿಸಿದ್ದಾರೆ.

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Mon, 02 Feb 2026 07:26:53 +0530 shivuagrico
Samudaya bhavana&ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಸಿಗಲಿದೆ 20 ಲಕ್ಷ ರೂ.ಅನುದಾನ https://krushirushi.in/Samudaya-bhavana-2414 https://krushirushi.in/Samudaya-bhavana-2414 Samudaya bhavana-ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಸಿಗಲಿದೆ 20 ಲಕ್ಷ ರೂ.ಅನುದಾನ

ಸಾಮಾಜಿಕ ಹಾಗೂ ಸಾಂಸ್ಕೃತಿಕ ಏಳಿಗೆಗಾಗಿ ಕರ್ನಾಟಕ ಸರ್ಕಾರವು ಒಂದು ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಶುಭ ಸಮಾರಂಭಗಳು, ಸಭೆಗಳು ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸಲು ಸುಸಜ್ಜಿತ ಕಟ್ಟಡಗಳ ಕೊರತೆಯನ್ನು ನೀಗಿಸಲು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆರ್ಥಿಕ ನೆರವು ನೀಡಲಾಗುತ್ತಿದೆ. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರ ಹೆಸರಿನಲ್ಲಿ ಈ ಭವನಗಳನ್ನು ನಿರ್ಮಿಸಲು ಅವಕಾಶವಿದೆ. ಇದು ಸಮುದಾಯದ ಏಳಿಗೆಯ ಜೊತೆಗೆ ಗ್ರಾಮೀಣ ಭಾಗದ ಹಲವು ಅಗತ್ಯತೆಗಳನ್ನು ಪೂರೈಸುತ್ತದೆ. ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ಏನು? ಅರ್ಜಿ ಸಲ್ಲಿಸುವುದು ಹೇಗೆ ಇತ್ಯಾದಿ ಮಾಹಿತಿಗಳನ್ನು ತಿಳಿಯೋಣ.

ಏನಿದು ಸಮುದಾಯ ಭವನ ನಿರ್ಮಾಣ ಯೋಜನೆ ?

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಈ ಯೋಜನೆಯು ಮುಖ್ಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಗತ್ಯಗಳನ್ನು ಪೂರೈಸಲು ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಡಾ. ಬಿ.ಆರ್. ಅಂಬೇಡ್ಕರ್ ಅಥವಾ ಡಾ. ಬಾಬು ಜಗಜೀವನ್ ರಾಮ್ ಅವರ ಹೆಸರಿನಲ್ಲಿ ಸಮುದಾಯ ಭವನಗಳನ್ನು ನಿರ್ಮಿಸಲು 20 ಲಕ್ಷ ರೂ.ದಿಂದ 4 ಕೋಟಿ ರೂ.ವರೆಗೆ ಬೃಹತ್ ಮೊತ್ತದ ಆರ್ಥಿಕ ಸಹಾಯಧನವನ್ನು ನೀಡಲಾಗುತ್ತದೆ. ನೋಂದಾಯಿತ ಸಂಸ್ಥೆಗಳು ತಮ್ಮ ಸ್ವಂತ ಜಾಗ ಅಥವಾ ಸರ್ಕಾರಿ ಮಂಜೂರಾದ ಜಾಗದಲ್ಲಿ ಈ ಭವನಗಳನ್ನು ನಿರ್ಮಿಸಿಕೊಳ್ಳಲು ಅವಕಾಶವಿದ್ದು, ಇದರಿಂದ ಬಡ ವರ್ಗದ ಜನರು ಮದುವೆ, ಸಭೆ-ಸಮಾರಂಭಗಳನ್ನು ಅತ್ಯಂತ ಕಡಿಮೆ ದರದಲ್ಲಿ ಅಥವಾ ಉಚಿತವಾಗಿ ನಡೆಸಲು ಸಾಧ್ಯವಾಗುತ್ತದೆ. ಆ ಮೂಲಕ ಖಾಸಗಿ ಕಲ್ಯಾಣ ಮಂಟಪಗಳ ದುಬಾರಿ ವೆಚ್ಚದಿಂದ ಮುಕ್ತಿ ಪಡೆಯಬಹುದು.

 

ಯೋಜನೆಯ ಉದ್ದೇಶವೇನು?

ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಖಾಸಗಿ ಕಲ್ಯಾಣ ಮಂಟಪಗಳ ದುಬಾರಿ ಬಾಡಿಗೆಯನ್ನು ಭರಿಸುವುದು ಕಷ್ಟಕರವಾಗಿದೆ. ಈ ಸಮಸ್ಯೆಗೆ ಪರಿಹಾರವಾಗಿ, ಸರ್ಕಾರವು ಸ್ಥಳೀಯ ಮಟ್ಟದಲ್ಲಿ ಸಮುದಾಯ ಭವನಗಳನ್ನು ನಿರ್ಮಿಸಿ, ಅತ್ಯಂತ ಕಡಿಮೆ ದರದಲ್ಲಿ ಅಥವಾ ಉಚಿತವಾಗಿ ಸಾರ್ವಜನಿಕ ಬಳಕೆಗೆ ಒದಗಿಸುವ ಉದ್ದೇಶವನ್ನು ಹೊಂದಿದೆ.

ಪ್ರದೇಶವಾರು ಮಂಜೂರಾಗುವ ಅನುದಾನದ ವಿವರ

  • ಗ್ರಾಮ ಮಟ್ಟ: ಹಳ್ಳಿಯ ಮಟ್ಟದಲ್ಲಿ ಸಣ್ಣ ಪ್ರಮಾಣದ ಸಭೆ-ಸಮಾರಂಭಗಳಿಗಾಗಿ ಸಮುದಾಯ ಭವನ ನಿರ್ಮಿಸಲು ಸರ್ಕಾರವು 20 ಲಕ್ಷ ರೂ.ಗಳ ಆರ್ಥಿಕ ನೆರವು ನೀಡುತ್ತದೆ.
  • ಹೋಬಳಿ ಮಟ್ಟ: ಹೋಬಳಿ ಕೇಂದ್ರಗಳಲ್ಲಿ ಭವನ ನಿರ್ಮಾಣ ಮಾಡಲು ಉದ್ದೇಶಿಸಿದರೆ, ಸರ್ಕಾರದಿಂದ 75 ಲಕ್ಷ ರೂ.ಗಳವರೆಗೆ ಅನುದಾನ ಲಭ್ಯವಿರುತ್ತದೆ.
  • ತಾಲ್ಲೂಕು ಮಟ್ಟ: ತಾಲ್ಲೂಕು ಕೇಂದ್ರಗಳಲ್ಲಿ ದೊಡ್ಡ ಮಟ್ಟದ ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಿಗಾಗಿ ಭವನ ನಿರ್ಮಿಸಲು 2 ಕೋಟಿ ರೂ.ಗಳ ಬೃಹತ್ ಮೊತ್ತವನ್ನು ಮಂಜೂರು ಮಾಡಲಾಗುತ್ತದೆ.
  • ಜಿಲ್ಲಾ ಮಟ್ಟ: ಜಿಲ್ಲಾ ಕೇಂದ್ರಗಳಲ್ಲಿ ಅತ್ಯಂತ ಸುಸಜ್ಜಿತ ಮತ್ತು ವಿಶಾಲವಾದ ಸಮುದಾಯ ಭವನಗಳ ನಿರ್ಮಾಣಕ್ಕಾಗಿ ಗರಿಷ್ಠ 4 ಕೋಟಿ ರೂ.ಗಳವರೆಗೆ ಆರ್ಥಿಕ ಸಹಾಯವನ್ನು ಒದಗಿಸಲಾಗುತ್ತದೆ.

ಅರ್ಹತಾ ಮಾನದಂಡಗಳು ಏನು?

  • ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಯಾವುದೇ ಸಂಘ ಅಥವಾ ಸಂಸ್ಥೆಯು ಕರ್ನಾಟಕ ಸರ್ಕಾರದ ನಿಯಮಗಳ ಅಡಿಯಲ್ಲಿ ಅಧಿಕೃತವಾಗಿ ನೋಂದಾಯಿತವಾಗಿರಬೇಕು. ನೋಂದಾಯಿಸದ ಸಂಸ್ಥೆಗಳಿಗೆ ಈ ಯೋಜನೆಯಡಿ ಅನುದಾನ ಸಿಗುವುದಿಲ್ಲ.
  • ಭವನವನ್ನು ಎಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆಯೋ ಆ ಜಾಗವು ಕಡ್ಡಾಯವಾಗಿ ಸಂಸ್ಥೆಯ ಹೆಸರಿನಲ್ಲಿಯೇ ಇರಬೇಕು. ಒಂದು ವೇಳೆ ಅದು ಸರ್ಕಾರ ನೀಡಿದ ಜಾಗವಾಗಿದ್ದರೆ, ಸರ್ಕಾರದಿಂದ ಅಧಿಕೃತವಾಗಿ ನೀಡಲಾದ ಮಂಜೂರಾತಿ ಪತ್ರ ಅಥವಾ ಹಂಚಿಕೆ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.
  • ಈ ಯೋಜನೆಯ ಮುಖ್ಯ ಉದ್ದೇಶ ಹಿಂದುಳಿದವರ ಏಳಿಗೆಯಾಗಿರುವುದರಿಂದ, ಯಾವ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಜನಸಂಖ್ಯೆ ಹೆಚ್ಚಿದೆಯೋ ಅಂತಹ ಪ್ರದೇಶಗಳಲ್ಲಿ ಭವನ ನಿರ್ಮಿಸಲು ಸರ್ಕಾರ ಮೊದಲ ಆದ್ಯತೆ ನೀಡುತ್ತದೆ.
  • ಕಟ್ಟಡದ ಕೆಲಸ ಶುರು ಮಾಡುವ ಮುನ್ನ ಸ್ಥಳೀಯ ನಗರಸಭೆ ಅಥವಾ ಗ್ರಾಮ ಪಂಚಾಯತ್‌ನಂತಹ ಸಮರ್ಥ ಪ್ರಾಧಿಕಾರದಿಂದ ಕಟ್ಟಡದ ನೀಲನಕ್ಷೆ ಮತ್ತು ನಿರ್ಮಾಣ ಪರವಾನಗಿಯನ್ನು ಕಡ್ಡಾಯವಾಗಿ ಪಡೆದಿರಬೇಕು. ಈ ನೀಲನಕ್ಷೆಯು ಎಂಜಿನಿಯರ್‌ಗಳಿಂದ ದೃಢೀಕರಿಸಲ್ಪಟ್ಟಿರಬೇಕು.

ಸಮುದಾಯ ಭವನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ, ನೀವು ವಾಸಿಸುವ ವ್ಯಾಪ್ತಿಯ ತಾಲ್ಲೂಕು ಅಥವಾ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಕಚೇರಿಗೆ ನೇರವಾಗಿ ಭೇಟಿ ನೀಡಿ, ಸಮುದಾಯ ಭವನ ನಿರ್ಮಾಣದ ಸಹಾಯಧನಕ್ಕಾಗಿ ಮೀಸಲಿಟ್ಟಿರುವ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.
  • ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿದ ನಂತರ, ಅದಕ್ಕೆ ಸಂಸ್ಥೆಯ ನೋಂದಣಿ ಪತ್ರ, ಜಮೀನಿನ ಪಹಣಿ ಮತ್ತು ಕಟ್ಟಡದ ನೀಲನಕ್ಷೆಯಂತಹ ಎಲ್ಲಾ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅದೇ ಕಚೇರಿಯಲ್ಲಿ ಸಲ್ಲಿಸಬೇಕು.
  • ನೀವು ಅರ್ಜಿಯನ್ನು ಸಲ್ಲಿಸಿದ ಬಳಿಕ, ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಭವನ ನಿರ್ಮಿಸಲು ಉದ್ದೇಶಿಸಿರುವ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡುತ್ತಾರೆ. ಅವರು ಜಾಗದ ಲಭ್ಯತೆ ಮತ್ತು ಅರ್ಹತೆಯನ್ನು ಪರಿಶೀಲಿಸಿ ವರದಿ ಸಿದ್ಧಪಡಿಸುತ್ತಾರೆ.
  • ಅಧಿಕಾರಿಗಳು ನೀಡಿದ ಸ್ಥಳ ಪರಿಶೀಲನಾ ವರದಿಯ ಆಧಾರದ ಮೇಲೆ, ನಿಮ್ಮ ಪ್ರಸ್ತಾವನೆಯನ್ನು ಅಂತಿಮ ಅನುಮೋದನೆಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡಲಾಗುತ್ತದೆ.
  • ಸರ್ಕಾರದ ಮಟ್ಟದಲ್ಲಿ ಅನುಮೋದನೆ ದೊರೆತ ನಂತರ, ಒಟ್ಟಾರೆ ಮೊತ್ತವನ್ನು ಒಮ್ಮೆಗೆ ನೀಡದೆ ಕಟ್ಟಡದ ಕಾಮಗಾರಿಯ ಪ್ರಗತಿಗೆ ಅನುಗುಣವಾಗಿ ಹಂತ-ಹಂತವಾಗಿ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

ಅಗತ್ಯವಿರುವ ದಾಖಲೆಗಳು

  • ಸಂಘಟನೆಯ ನೋಂದಣಿ ಪ್ರಮಾಣಪತ್ರ
  • ಪಹಣಿ, ಕ್ರಯ ಪತ್ರ ಅಥವಾ ಸರ್ಕಾರಿ ಜಾಗದ ಮಂಜೂರಾತಿ ಪತ್ರ.
  • ಕಟ್ಟಡದ ನೀಲನಕ್ಷೆ ಮತ್ತು ಅನುಮೋದಿತ ಅಂದಾಜು ವೆಚ್ಚದ ಪಟ್ಟಿ.
  • ಸ್ಥಳೀಯ ಗ್ರಾಮ ಪಂಚಾಯತ್ ಅಥವಾ ನಗರಸಭೆಯಿಂದ ಪಡೆದ ಅನುಮತಿ ಪತ್ರ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಈ ಯೋಜನೆಯ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ಅಥವಾ ಗೊಂದಲಗಳಿದ್ದಲ್ಲಿ ರಾಜ್ಯ ಸರ್ಕಾರದ 24x7 ಸಹಾಯವಾಣಿ: 94823 00400 ಅಥವಾ ನಿಮ್ಮ ಹತ್ತಿರದ ತಾಲ್ಲೂಕು/ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಿ.

 

]]>
Sat, 31 Jan 2026 08:06:09 +0530 shivuagrico
Remarriage incentive&ವಿಧವಾ ಮರು ವಿವಾಹ ಪ್ರೋತ್ಸಾಹಧನ ಯೋಜನೆ: ಮರು ವಿವಾಹವಾದರೆ ಸಿಗಲಿದೆ 3 ಲಕ್ಷ ರೂ. ಪ್ರೋತ್ಸಾಹಧನ! https://krushirushi.in/Remarriage-incentive-2412 https://krushirushi.in/Remarriage-incentive-2412 Remarriage incentive-ವಿಧವಾ ಮರು ವಿವಾಹ ಪ್ರೋತ್ಸಾಹಧನ ಯೋಜನೆ: ಮರು ವಿವಾಹವಾದರೆ ಸಿಗಲಿದೆ 3 ಲಕ್ಷ ರೂ. ಪ್ರೋತ್ಸಾಹಧನ!

ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಯ ವಿಧವೆಯರ ಪುನರ್ವಿವಾಹಕ್ಕೆ 3 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡುತ್ತಿದೆ. ಈ ಯೋಜನೆಯು ಮಹಿಳೆಯರಿಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಒದಗಿಸುವ ಗುರಿ ಹೊಂದಿದೆ. ಮದುವೆಯಾದ ಒಂದು ವರ್ಷದೊಳಗೆ ಅರ್ಜಿ ಸಲ್ಲಿಸಬೇಕು. ಯಾವುದೇ ಆದಾಯ ಮಿತಿ ಇಲ್ಲ. ಅರ್ಹತೆ ಮತ್ತು ಅಗತ್ಯ ದಾಖಲೆಗಳ ವಿವರಗಳನ್ನು ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಲಭ್ಯವಿದೆ.

ಇಂದಿನ ಸಮಾಜ ಎಷ್ಟೇ ಮುಂದುವರಿದಿದ್ದರೂ ಪತಿಯನ್ನು ಕಳೆದುಕೊಂಡ ಮಹಿಳೆಯರನ್ನು ನೋಡುವ ರೀತಿಯೇ ಬೇರೆ. ಅವರಿಗೆ ಇಂದಿಗೂ ಸಮಾನ ಗೌರವಗಳು ಸಿಗುತ್ತಿಲ್ಲ. ಚಿಕ್ಕ ವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡವರಿಗೆ ಮರು ವಿವಾಹ ಆಗವ ಅವಕಾಶಗಳು ಸಿಗುವುದು ಕಡಿಮೆ. ಹೀಗಾಗಿ ವಿಧವೆಯರ ಮರು ವಿವಾಹಕ್ಕೆ ಸರ್ಕಾರವೇ ಸಂಪೂರ್ಣ ಆರ್ಥಿಕ ಖರ್ಚು ವೆಚ್ಚಗಳನ್ನು ಭರಸುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿಯ ವಿಧವೆಯರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಒಂದು ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಪತಿಯನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಮಹಿಳೆಯರು ಹೊಸ ಬದುಕನ್ನು ಕಟ್ಟಿಕೊಳ್ಳಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ವಿಧವಾ ಮರು ವಿವಾಹ ಪ್ರೋತ್ಸಾಹಧನ ಯೋಜನೆ? ಈ ಯೋಜನೆಯಡಿ ದೊರೆಯುವ ಆರ್ಥಿಕ ನೆರವು ಎಷ್ಟು? ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.

ಏನಿದು ವಿಧವಾ ಮರು ವಿವಾಹ ಪ್ರೋತ್ಸಾಹಧನ ಯೋಜನೆ?

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿಯ ವಿಧವೆಯರ ಮರುಬಾಳಿಗೆ ಆಸರೆಯಾಗಲು 3 ಲಕ್ಷ ರೂಪಾಯಿಗಳ ಆರ್ಥಿಕ ಪ್ರೋತ್ಸಾಹಧನ ಯೋಜನೆಯನ್ನು ಜಾರಿಗೆ ತಂದಿದೆ. ಸಾಮಾಜಿಕ ಬದಲಾವಣೆ ಮತ್ತು ವಿಧವೆಯರ ಪುನರ್ವಸತಿಯನ್ನು ಮುಖ್ಯ ಉದ್ದೇಶವಾಗಿಟ್ಟುಕೊಂಡಿರುವ ಈ ಯೋಜನೆಗೆ ಯಾವುದೇ ಆದಾಯದ ಮಿತಿ ಇರುವುದಿಲ್ಲ. ಪರಿಶಿಷ್ಟ ಜಾತಿಗೆ ಸೇರಿದ ವಿಧವೆಯು ಯಾವುದೇ ಧರ್ಮ ಅಥವಾ ಜಾತಿಯ ಪುರುಷನನ್ನು ಮರು ವಿವಾಹವಾದಲ್ಲಿ ಈ ಸೌಲಭ್ಯಕ್ಕೆ ಅರ್ಹರಾಗಿದ್ದು, ಮದುವೆಯಾದ ಒಂದು ವರ್ಷದ ಒಳಗಾಗಿ ಅಧಿಕೃತ ಜಾಲತಾಣದ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಈಗಾಗಲೇ ಸರಳ ವಿವಾಹ ಯೋಜನೆಯಡಿ ಸೌಲಭ್ಯ ಪಡೆದಿದ್ದಲ್ಲಿ 2.50 ಲಕ್ಷ ರೂಪಾಯಿಗಳ ಪ್ರೋತ್ಸಾಹಧನ ಲಭ್ಯವಿರುತ್ತದೆ.

 

ಯೋಜನೆಯ ಮುಖ್ಯ ಉದ್ದೇಶಗಳು

  • ವಿಧವೆಯರ ಮರು ವಿವಾಹವನ್ನು ಉತ್ತೇಜಿಸುವುದು ಮತ್ತು ಅವರಿಗೆ ಸಮಾಜದಲ್ಲಿ ಗೌರವಯುತವಾದ ಸಾಮಾಜಿಕ ಭದ್ರತೆಯನ್ನು ಒದಗಿಸುವುದು ಈ ಯೋಜನೆಯ ಪ್ರಮುಖ ಗುರಿಯಾಗಿದೆ.
  • ಮರು ವಿವಾಹದ ಮೂಲಕ ಮಹಿಳೆಯರಲ್ಲಿ ಕಳೆದುಹೋದ ಆತ್ಮವಿಶ್ವಾಸವನ್ನು ಮರಳಿ ತಂದು, ಅವರಲ್ಲಿ ಹೊಸ ಬದುಕಿನ ಭರವಸೆ ಮೂಡಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ.
  • ಮರು ವಿವಾಹದ ನಂತರ ಎದುರಾಗಬಹುದಾದ ಆರ್ಥಿಕ ಅಡಚಣೆಗಳನ್ನು ನಿವಾರಿಸಿ, ದಂಪತಿಗಳು ಸ್ವಾವಲಂಬಿಯಾಗಿ ಗೌರವಯುತ ಜೀವನ ನಡೆಸಲು ಆರ್ಥಿಕ ನೆರವು ನೀಡುವುದು ಇದರ ಉದ್ದೇಶವಾಗಿದೆ.
  • ವಿಧವೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಮೂಲಕ ಅವರ ಜೀವನದಲ್ಲಿ ಸಕಾರಾತ್ಮಕ ಸಾಮಾಜಿಕ ಬದಲಾವಣೆಯನ್ನು ತರಲು ಈ ಯೋಜನೆ ಸಹಕಾರಿಯಾಗಿದೆ.
  • ಪರಿಶಿಷ್ಟ ಜಾತಿಯ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಮೂಲಕ ಅವರ ಪುನರ್ವಸತಿ ಮತ್ತು ಸುರಕ್ಷಿತ ಭವಿಷ್ಯವನ್ನು ಖಚಿತಪಡಿಸುವುದು ಸರ್ಕಾರದ ಆಶಯವಾಗಿದೆ.

ಪ್ರೋತ್ಸಾಹಧನದ ವಿವರಗಳು

  • ಪರಿಶಿಷ್ಟ ಜಾತಿಯ ವಿಧವೆಯು ಯಾವುದೇ ಧರ್ಮ ಅಥವಾ ಜಾತಿಯ ಪುರುಷನನ್ನು ಮರು ಮದುವೆಯಾದ ಸಂದರ್ಭದಲ್ಲಿ ಸರ್ಕಾರವು ಅವರಿಗೆ 3,00,000 ರೂ. (ಮೂರು ಲಕ್ಷ ರೂಪಾಯಿ) ಗಳ ಪ್ರೋತ್ಸಾಹಧನವನ್ನು ನೀಡುತ್ತದೆ.
  • ಫಲಾನುಭವಿಯು ಈ ಹಿಂದೆ ಸರ್ಕಾರದ 'ಸರಳ ವಿವಾಹ' ಯೋಜನೆಯಡಿ ಈಗಾಗಲೇ ಪ್ರೋತ್ಸಾಹಧನವನ್ನು ಪಡೆದಿದ್ದರೆ, ಅಂತಹವರಿಗೆ ಈ ಯೋಜನೆಯ ಅಡಿಯಲ್ಲಿ 2,50,000 ರೂ. (ಎರಡು ಲಕ್ಷದ ಐವತ್ತು ಸಾವಿರ ರೂಪಾಯಿ) ಗಳ ಸಹಾಯಧನ ಲಭ್ಯವಿರುತ್ತದೆ.
  • ಈ ಧನಸಹಾಯವನ್ನು ಪಡೆಯಲು ಯಾವುದೇ ಆದಾಯದ ಮಿತಿ ಇರುವುದಿಲ್ಲ, ಇದು ಎಲ್ಲಾ ಆರ್ಥಿಕ ಸ್ತರದ ಪರಿಶಿಷ್ಟ ಜಾತಿಯ ವಿಧವೆಯರಿಗೆ ಅನ್ವಯಿಸುತ್ತದೆ.
  • ಅರ್ಜಿದಾರರು ಸಲ್ಲಿಸಿದ ದಾಖಲೆಗಳು ಮತ್ತು ಸ್ಥಳ ಪರಿಶೀಲನೆ ಯಶಸ್ವಿಯಾದ ನಂತರ, ಈ ಮೊತ್ತವನ್ನು ನೇರವಾಗಿ ವಿಧವೆಯ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.
  • ಮದುವೆಯಾದ ಒಂದು ವರ್ಷದ ಒಳಗಾಗಿ ಅರ್ಜಿ ಸಲ್ಲಿಸುವವರಿಗೆ ಮಾತ್ರ ಈ ಹಣಕಾಸಿನ ಸೌಲಭ್ಯವನ್ನು ಒದಗಿಸಲಾಗುತ್ತದೆ.

ಅರ್ಹತಾ ಮಾನದಂಡಗಳೇನು?

  • ಅರ್ಜಿಯನ್ನು ಸಲ್ಲಿಸುವ ಮಹಿಳೆಯು ಕಡ್ಡಾಯವಾಗಿ ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದವರಾಗಿರಬೇಕು.
  • ಮರು ವಿವಾಹವಾಗುವ ದಂಪತಿಗಳು ಕಡ್ಡಾಯವಾಗಿ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.
  • ಈ ಯೋಜನೆಯ ವಿಶೇಷತೆಯೆಂದರೆ ಸೌಲಭ್ಯ ಪಡೆಯಲು ಯಾವುದೇ ರೀತಿಯ ಆದಾಯದ ಮಿತಿ ಇರುವುದಿಲ್ಲ.
  • ಮರು ವಿವಾಹವಾದ ಒಂದು ವರ್ಷದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ.
  • ವಿವಾಹವು ಸರ್ಕಾರದ ನಿಯಮಗಳಂತೆ ಕಡ್ಡಾಯವಾಗಿ ಅಧಿಕೃತವಾಗಿ ನೋಂದಣಿಯಾಗಿರಬೇಕು ಮತ್ತು ಅದರ ಪ್ರಮಾಣಪತ್ರ ಹೊಂದಿರಬೇಕು.
  • ಮದುವೆಯಾಗುವ ಪುರುಷನು (ಸಂಗಾತಿ) ಯಾವುದೇ ಜಾತಿ ಅಥವಾ ಧರ್ಮಕ್ಕೆ ಸೇರಿದವರಾಗಿದ್ದರೂ ಈ ಯೋಜನೆಗೆ ಅರ್ಹರಾಗಿರುತ್ತಾರೆ, ಇಲ್ಲಿ ಯಾವುದೇ ಜಾತಿಯ ನಿರ್ಬಂಧವಿಲ್ಲ.

    ವಿಧವಾ ಮರು ವಿವಾಹ ಯೋಜನೆ ಜಾಲತಾಣ
    • ಮೊದಲು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಪೋರ್ಟಲ್ swdservices.karnataka.gov.in ಗೆ ಲಾಗಿನ್ ಆಗಿ.
    • ನಿಮ್ಮ ಆಧಾರ್ ಸಂಖ್ಯೆಯನ್ನು ಬಳಸಿ ನೋಂದಣಿ ಮಾಡಿಕೊಳ್ಳಿ.
    • ದಂಪತಿಗಳ ಹೆಸರು, ವಿಳಾಸ ಮತ್ತು ಮದುವೆಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
    • ಮೇಲೆ ತಿಳಿಸಿದ ಎಲ್ಲಾ ಅಗತ್ಯ ದಾಖಲೆಗಳನ್ನು ನಿಗದಿಪಡಿಸಿದ ಗಾತ್ರದಲ್ಲಿ ಅಪ್‌ಲೋಡ್ ಮಾಡಿ.
    • ಮಾಹಿತಿಯನ್ನು ಪರಿಶೀಲಿಸಿ 'Submit' ಬಟನ್ ಒತ್ತಿ. ನಂತರ ಬರುವ ರಸೀದಿಯಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಿ.
    • ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ನಂತರ, ಅನುಮೋದನೆ ದೊರೆತರೆ ಹಣವು ನೇರವಾಗಿ ವಿಧವೆಯ ಬ್ಯಾಂಕ್ ಖಾತೆಗೆ ಹಣವನ್ನು ನೇರವಾಗಿ ಜಮೆಯಾಗುತ್ತದೆ.

    ಅಗತ್ಯವಿರುವ ದಾಖಲೆಗಳು

    • ಅರ್ಜಿ ಸಲ್ಲಿಸುವಾಗ ಈ ಕೆಳಗಿನ ದಾಖಲೆಗಳನ್ನು ಸ್ಕ್ಯಾನ್ ಮಾಡಿ (400KB ಒಳಗೆ) ಅಪ್‌ಲೋಡ್ ಮಾಡಬೇಕಾಗುತ್ತದೆ.
    • ವಧು ಮತ್ತು ವರನ ಆಧಾರ್ ಕಾರ್ಡ್.
    • ವಧುವಿನ ಜಾತಿ ಪ್ರಮಾಣ ಪತ್ರ (15 ಅಂಕಿಗಳ RD ಸಂಖ್ಯೆ).
    • ಮರು ವಿವಾಹದ ನೋಂದಣಿ ಪ್ರಮಾಣ ಪತ್ರ
    • ಮದುವೆಯ ಜಂಟಿ ಭಾವಚಿತ್ರ
    • ವಧು ಮತ್ತು ವರನ ವಯಸ್ಸಿನ ಪುರಾವೆ (SSLC ಅಂಕಪಟ್ಟಿ ಅಥವಾ ಜನನ ಪ್ರಮಾಣ ಪತ್ರ).
    • ಮೊದಲ ಪತಿಯ ಮರಣ ಪ್ರಮಾಣ ಪತ್ರ
    • ಮೊದಲ ಪತಿಯ ವಿಳಾಸದ ಪುರಾವೆ (ಯಾವುದಾದರೊಂದು).
    • ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ.

    ಸಹಾಯವಾಣಿ

    • ಹೆಚ್ಚಿನ ಮಾಹಿತಿಗಾಗಿ ಅಥವಾ ತಾಂತ್ರಿಕ ತೊಂದರೆಗಳಿದ್ದಲ್ಲಿ ದೂರವಾಣಿ: 080-22340956 / 080-22634300 ಗೆ ಸಂಪರ್ಕಿಸಬಹುದಾಗಿದೆ.
    • ಮೊಬೈಲ್: 09008400078 / 09480843005


]]>
Fri, 30 Jan 2026 12:19:14 +0530 shivuagrico
Tengu belevime&ತೆಂಗಿಗೆ ಹೆಚ್ಚಿದ ಬೇಡಿಕೆ,3250 ರೂಪಾಯಿ ಬೆಳೆವಿಮೆ ಕಟ್ಟಿ 65,000 ರೂಪಾಯಿ ಬೆಳೆವಿಮೆ ಪಡೆಯಿರಿ https://krushirushi.in/Tengu-belevime-2413 https://krushirushi.in/Tengu-belevime-2413 Tengu belevime-ತೆಂಗಿಗೆ ಹೆಚ್ಚಿದ ಬೇಡಿಕೆ,3250 ರೂಪಾಯಿ ಬೆಳೆವಿಮೆ ಕಟ್ಟಿ 65,000 ರೂಪಾಯಿ ಬೆಳೆವಿಮೆ ಪಡೆಯಿರಿ

ಕರ್ನಾಟಕದ ಲಕ್ಷಾಂತರ ರೈತರ ದಶಕಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ತೆಂಗು ರಾಜ್ಯದ ಪ್ರಮುಖ ಬೆಳೆಯಾಗಿದ್ದರೂ ವಿಮಾ ವ್ಯಾಪ್ತಿಗೆ ಒಳಪಟ್ಟಿರಲಿಲ್ಲ. ತೆಂಗಿಗೆ ಭಾದಿಸುತ್ತಿರುವ ರೋಗಳು ಹಾಗೂ ಬರಗಾಲದಿಂದಾಗಿ ತೆಂಗು ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ. ಹೀಗಾಗಿ ಅಡಿಕೆ ಮತ್ತು ಕಾಳುಮೆಣಸಿನಂತೆಯೇ ತೆಂಗು ಬೆಳೆಯನ್ನೂ 'ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ'ಯಡಿ ತರಲು ತೋಟಗಾರಿಕಾ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತಾದ ಪ್ರಸ್ತಾವನೆಯು ಸರ್ಕಾರದ ಅಂತಿಮ ಅನುಮೋದನೆಯ ಹಂತದಲ್ಲಿದ್ದು, ಜೂನ್ ತಿಂಗಳಿನಿಂದ ಜಾರಿಗೆ ಬರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಏನಿದು ತೆಂಗು ವಿಮೆ ಯೋಜನೆ? ರೈತರಿಗೆ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.

ಏನಿದು ತೆಂಗು ಬೆಳೆ ವಿಮೆ ಯೋಜನೆ ?

ತೆಂಗು ಬೆಳೆ ವಿಮಾ ಯೋಜನೆಯು ಪ್ರಕೃತಿ ವಿಕೋಪ, ಕೀಟಬಾಧೆ ಅಥವಾ ಹವಾಮಾನ ಏರುಪೇರಿನಿಂದ ನಷ್ಟ ಅನುಭವಿಸುವ ತೆಂಗು ಬೆಳೆಗಾರರಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶ ಹೊಂದಿರುವ ಯೋಜನೆಯಾಗಿದೆ. ಈ ಯೋಜನೆಯಡಿ ಪ್ರತಿ ಹೆಕ್ಟೇರ್‌ಗೆ 65,000 ರೂ. ವಿಮಾ ಮೊತ್ತವನ್ನು ನಿಗದಿಪಡಿಸಲಾಗಿದ್ದು, ರೈತರು ಇದರ ಕೇವಲ 5% (ಅಂದಾಜು 3,250 ರೂ.) ಪ್ರೀಮಿಯಂ ಮೊತ್ತವನ್ನು ಪಾವತಿಸುವ ಮೂಲಕ ನೋಂದಾಯಿಸಿಕೊಳ್ಳಬಹುದು. ಬರಗಾಲ, ಅನಿರೀಕ್ಷಿತ ಮಳೆ ಅಥವಾ ರೋಗಬಾಧೆಯಿಂದ ಇಳುವರಿ ಕಡಿಮೆಯಾದಲ್ಲಿ, ಹೋಬಳಿ ಮಟ್ಟದ ಹವಾಮಾನ ದತ್ತಾಂಶಗಳನ್ನು ಆಧರಿಸಿ ವಿಮಾ ಕಂಪನಿಗಳು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಪರಿಹಾರ ಮೊತ್ತವನ್ನು ಪಾವತಿಸುತ್ತವೆ. ಈ ಯೋಜನೆಯು ಪ್ರಸ್ತುತ ಸರ್ಕಾರದ ಅಂತಿಮ ಅನುಮೋದನೆಯ ಹಂತದಲ್ಲಿದ್ದು, ಮುಂಬರುವ ಜೂನ್ ತಿಂಗಳಿನಿಂದ ಜಾರಿಗೆ ಬರುವ ನಿರೀಕ್ಷೆಯಿದೆ.

ಯೋಜನೆಯ ಪ್ರಮುಖ ಅಂಶಗಳು

  • ವಿಮಾ ಮೊತ್ತ: ಈ ಯೋಜನೆಯ ಅಡಿಯಲ್ಲಿ ಪ್ರತಿ ಹೆಕ್ಟೇರ್ ತೆಂಗು ಬೆಳೆಗೆ ಗರಿಷ್ಠ 65,000 ರೂ.ಮೊತ್ತದ ವಿಮಾ ರಕ್ಷಣೆಯನ್ನು ನಿಗದಿಪಡಿಸಲಾಗಿದೆ.
  • ರೈತರ ಪ್ರೀಮಿಯಂ ಪಾಲು: ಬೆಳೆಗಾರರು ವಿಮಾ ಮೊತ್ತದ ಕೇವಲ ಶೇ. 5 ರಷ್ಟು ಅಂದರೆ ಅಂದಾಜು 3,250 ರೂ. ಹಣವನ್ನು ಮಾತ್ರ ಪ್ರೀಮಿಯಂ ಆಗಿ ಪಾವತಿಸಬೇಕಾಗುತ್ತದೆ.
  • ಯೋಜನೆಯ ಜಾರಿ: ಸರ್ಕಾರದ ಅಂತಿಮ ಅನುಮೋದನೆ ಮತ್ತು ಟೆಂಡರ್ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ, ಮುಂಬರುವ ಜೂನ್ ತಿಂಗಳಿನಿಂದ ಈ ಯೋಜನೆ ಅಧಿಕೃತವಾಗಿ ಜಾರಿಗೆ ಬರಲಿದೆ.
  • ಪರಿಹಾರದ ಲೆಕ್ಕಾಚಾರ: ಹೋಬಳಿ ಮಟ್ಟದ ಹವಾಮಾನ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಮಳೆ ಮಾಪನ ಕೇಂದ್ರಗಳಿಂದ ಸಿಗುವ ದತ್ತಾಂಶಗಳ ಆಧಾರದ ಮೇಲೆ ಬೆಳೆ ನಷ್ಟವನ್ನು ಅಂದಾಜಿಸಿ ರೈತರಿಗೆ ಪರಿಹಾರ ನೀಡಲಾಗುತ್ತದೆ.

ಪ್ರಮುಖ ಬೆಳೆ ವಿಮೆ ದರಗಳ ಹೋಲಿಕೆ

  • ತೆಂಗು ಬೆಳೆ: ತೆಂಗಿನ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 65,000 ರೂ. ವಿಮಾ ಮೊತ್ತವನ್ನು ನಿಗದಿಪಡಿಸಲಾಗಿದ್ದು, ರೈತರು ಇದರ 5% ಅಂದರೆ ಸುಮಾರು 3,250 ರೂ. ಹಣವನ್ನು ಪ್ರೀಮಿಯಂ ಆಗಿ ಪಾವತಿಸಬೇಕಾಗುತ್ತದೆ.
  • ಅಡಿಕೆ ಬೆಳೆ: ಅಡಿಕೆ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 1,28,000 ರೂ. ರಷ್ಟು ಹೆಚ್ಚಿನ ವಿಮಾ ಮೊತ್ತದ ರಕ್ಷಣೆ ಲಭ್ಯವಿದ್ದು, ಇದಕ್ಕೆ ಸರ್ಕಾರ ನಿಗದಿಪಡಿಸಿದ ದರದಂತೆ ಪ್ರೀಮಿಯಂ ಪಾವತಿಸಬೇಕು.
  • ಕಾಳು ಮೆಣಸು: ಕಾಳು ಮೆಣಸು ಬೆಳೆಗೆ ಪ್ರತಿ ಹೆಕ್ಟೇರ್‌ಗೆ 47,000 ರೂ. ವಿಮಾ ಮೊತ್ತವನ್ನು ನಿಗದಿಪಡಿಸಲಾಗಿದ್ದು, ಇದಕ್ಕೂ ಸಹ ಇಲಾಖೆ ಸೂಚಿಸಿದ ನಿಗದಿತ ದರದಂತೆ ವಿಮಾ ಕಂತನ್ನು ಕಟ್ಟಬೇಕಾಗುತ್ತದೆ.

ತೆಂಗಿನ ಮರ ಹತ್ತುವವರಿಗೆ 'ಕೇರಾ' ಸುರಕ್ಷಾ ಯೋಜನೆಯಡಿ 7 ಲಕ್ಷ ರೂ. ವಿಮೆ

ತೆಂಗಿನ ಮರ ಏರುವ ಕಾರ್ಮಿಕರ ಜೀವಕ್ಕೆ ರಕ್ಷಣೆ ನೀಡಲು ಕೇಂದ್ರ ಸರ್ಕಾರವು 'ಕೇರಾ' ಸುರಕ್ಷಾ ವಿಮಾ ಯೋಜನೆಯನ್ನು ಜಾರಿಗೆ ತಂದಿದೆ. ತೆಂಗು ಅಭಿವೃದ್ಧಿ ಮಂಡಳಿ ಮತ್ತು ದಿ ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿಯ ಸಹಯೋಗದಲ್ಲಿ ಇದು ಕಾರ್ಯನಿರ್ವಹಿಸುತ್ತದೆ.

ಯಾರಿಗೆಲ್ಲಾ ಅನ್ವಯಿಸುತ್ತದೆ?

  • ಮರ ಹತ್ತಿ ಎಳನೀರು ಅಥವಾ ತೆಂಗಿನಕಾಯಿ ಕೀಳುವ ಕೆಲಸಗಾರರು ಹಾಗೂ ನೀರಾ ಇಳಿಸುವ ತಂತ್ರಜ್ಞರಿಗೆ ಈ ಯೋಜನೆಯಡಿ ಪೂರ್ಣ ವಿಮಾ ರಕ್ಷಣೆ ದೊರೆಯುತ್ತದೆ.
  • ತೆಂಗಿನ ತಳಿಗಳ ಸಂಕರೀಕರಣ ಪ್ರಕ್ರಿಯೆಯಲ್ಲಿ ತೊಡಗಿರುವ ನುರಿತ ಕೆಲಸಗಾರರು ಈ ವಿಮೆಯ ಲಾಭ ಪಡೆಯಲು ಅರ್ಹರಾಗಿರುತ್ತಾರೆ.
  • ತೆಂಗು ಅಭಿವೃದ್ಧಿ ಮಂಡಳಿಯ ವತಿಯಿಂದ 'ಫ್ರೆಂಡ್ಸ್ ಆಫ್ ಕೋಕೋನಟ್ ಟ್ರೀ' ಎಂಬ ಕೌಶಲ ತರಬೇತಿ ಪಡೆದು ವೃತ್ತಿ ಮಾಡುತ್ತಿರುವ ಎಲ್ಲಾ ಕಾರ್ಮಿಕರು ಈ ಯೋಜನೆಯ ವ್ಯಾಪ್ತಿಗೆ ಬರುತ್ತಾರೆ.

ವಿಮಾ ಕಂತು ಮತ್ತು ಪರಿಹಾರದ ವಿವರ

  • ಈ ಯೋಜನೆಯ ಒಟ್ಟು ವಾರ್ಷಿಕ ಪ್ರೀಮಿಯಂ ಮೊತ್ತ 956 ರೂ. ಆಗಿದ್ದು, ಇದರಲ್ಲಿ ರೈತರು ಅಥವಾ ಕಾರ್ಮಿಕರು ಕೇವಲ 239 ರೂ. ಪಾವತಿಸಬೇಕಾಗುತ್ತದೆ. ಉಳಿದ 717 ರೂ.ಮೊತ್ತವನ್ನು ತೆಂಗು ಅಭಿವೃದ್ಧಿ ಮಂಡಳಿಯೇ ಭರಿಸುತ್ತದೆ.
  • ಕೆಲಸದ ಸಮಯದಲ್ಲಿ ಆಕಸ್ಮಿಕವಾಗಿ ಮರಣ ಹೊಂದಿದರೆ ಅಥವಾ ಶಾಶ್ವತವಾಗಿ ಅಂಗವೈಕಲ್ಯಕ್ಕೆ ತುತ್ತಾದರೆ ಕುಟುಂಬಕ್ಕೆ 7 ಲಕ್ಷ ರೂ.ಪರಿಹಾರ ಧನ ಸಿಗಲಿದೆ.
  • ಅಪಘಾತದಿಂದಾಗಿ ಭಾಗಶಃ ಅಂಗವೈಕಲ್ಯ ಸಂಭವಿಸಿದಲ್ಲಿ ಕಾರ್ಮಿಕರಿಗೆ 3.50 ಲಕ್ಷ ರೂ. ವರೆಗೆ ವಿಮಾ ಹಣ ದೊರೆಯುತ್ತದೆ.
  • ಚಿಕಿತ್ಸೆಯ ಅಗತ್ಯವಿದ್ದಲ್ಲಿ ಆಸ್ಪತ್ರೆಯ ವೆಚ್ಚಕ್ಕಾಗಿ ಗರಿಷ್ಠ 2 ಲಕ್ಷ ರೂ.ದವರೆಗೆ ಮರುಪಾವತಿ ಪಡೆಯಲು ಅವಕಾಶವಿದೆ.
  • ಯೋಜನೆಯಡಿ ಆಂಬುಲೆನ್ಸ್ ಶುಲ್ಕಕ್ಕಾಗಿ 3,500 ರೂ.ಮತ್ತು ಅಂತ್ಯಕ್ರಿಯೆಯ ಕಾರ್ಯಗಳಿಗಾಗಿ 5,500 ರೂ. ಹೆಚ್ಚುವರಿ ಧನಸಹಾಯ ಲಭ್ಯವಿರುತ್ತದೆ. ( ಕಾರ್ಮಿಕರ ಪಿಂಚಣಿ ಯೋಜನೆ )


ತೆಂಗು ಬೆಳೆಗೆ ವಿಮೆ ಏಕಿರಬೇಕು?

ವಿಶ್ವದ ಒಟ್ಟು ತೆಂಗು ಉತ್ಪಾದನೆಯಲ್ಲಿ ಇಂಡೋನೇಷ್ಯಾ ಮತ್ತು ಫಿಲಿಪೈನ್ಸ್ ರಾಷ್ಟ್ರಗಳ ಜೊತೆಗೂಡಿ ಭಾರತವು ಶೇ. 73 ರಷ್ಟು ದೊಡ್ಡ ಪಾಲನ್ನು ಹೊಂದಿದ್ದರೂ ಸಹ, ಇಲ್ಲಿನ ಬೆಳೆಗಾರರು ನಿರಂತರವಾಗಿ ಹಲವು ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಮುಖ್ಯವಾಗಿ ಕಪ್ಪು ತಲೆ ಕೀಟ ಮತ್ತು ನುಸಿ ರೋಗದಂತಹ ಭೀಕರ ರೋಗಬಾಧೆಗಳಿಂದ ಇಳುವರಿ ಗಣನೀಯವಾಗಿ ಕುಸಿಯುತ್ತಿದ್ದರೆ, ಮತ್ತೊಂದೆಡೆ ತೀವ್ರ ಬರಗಾಲ ಅಥವಾ ಅತಿಯಾದ ಮಳೆಯಂತಹ ಹವಾಮಾನ ವೈಪರೀತ್ಯಗಳಿಂದ ತೆಂಗಿನ ಮರಗಳು ಒಣಗಿ ರೈತರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಇದರ ಜೊತೆಗೆ, ತೆಂಗಿನ ಮರ ಏರುವಾಗ ಸಂಭವಿಸಬಹುದಾದ ಆಕಸ್ಮಿಕ ಅಪಘಾತಗಳ ಭೀತಿಯು ಕಾರ್ಮಿಕರ ಮತ್ತು ಅವರ ಕುಟುಂಬಗಳ ಜೀವನವನ್ನು ಅತಂತ್ರ ಸ್ಥಿತಿಗೆ ತಳ್ಳುತ್ತಿದ್ದು, ಇಂತಹ ಸವಾಲುಗಳನ್ನು ಎದುರಿಸಲು ಈಗ ಸರ್ಕಾರ ಜಾರಿಗೆ ತರುತ್ತಿರುವ ವಿಮಾ ಯೋಜನೆಗಳು ಅತ್ಯಗತ್ಯವಾಗಿವೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಆಸಕ್ತ ರೈತರು ಮತ್ತು ಕಾರ್ಮಿಕರು ತಮ್ಮ ವ್ಯಾಪ್ತಿಯ ಹತ್ತಿರದ ತೋಟಗಾರಿಕಾ ಇಲಾಖೆಯ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರವನ್ನು ನೇರವಾಗಿ ಸಂಪರ್ಕಿಸಬೇಕು.
  • ಇಲಾಖೆಯಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಸಲ್ಲಿಸಬೇಕಾಗುತ್ತದೆ.
  • ಅರ್ಜಿಯ ಜೊತೆಗೆ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಪಹಣಿ (RTC) ಮತ್ತು ಸಕ್ರಿಯ ಮೊಬೈಲ್ ಸಂಖ್ಯೆಯನ್ನು ಒದಗಿಸುವುದು ಕಡ್ಡಾಯವಾಗಿದೆ.
  • ಯೋಜನೆಯಡಿ ನಿಗದಿಪಡಿಸಿದ ರೈತರ ಪಾಲಿನ ಪ್ರೀಮಿಯಂ ಮೊತ್ತವನ್ನು (ತೆಂಗು ವಿಮೆಗೆ ಅಂದಾಜು 3,250 ರೂ. ಅಥವಾ ಕೇರಾ ಸುರಕ್ಷಾ ಯೋಜನೆಗೆ 239ರೂ. ) ಬ್ಯಾಂಕ್ ಅಥವಾ ಇಲಾಖೆ ಸೂಚಿಸಿದ ಕೇಂದ್ರಗಳಲ್ಲಿ ಪಾವತಿಸಬೇಕು.
  • 'ಕೇರಾ' ಸುರಕ್ಷಾ ವಿಮಾ ಯೋಜನೆಗೆ ನೋಂದಾಯಿಸಿಕೊಳ್ಳಲು ಮಾರ್ಚ್ ಅಂತ್ಯದವರೆಗೆ ಮಾತ್ರ ಅವಕಾಶವಿದ್ದು, ರೈತರು ಶೀಘ್ರವಾಗಿ ಅರ್ಜಿ ಸಲ್ಲಿಸುವುದು ಸೂಕ್ತ.

ಹೆಚ್ಚಿನ ಮಾಹಿತಿಗಾಗಿ

ಹೆಚ್ಚಿನ ಮಾಹಿತಿಗಾಗಿ ಅಥವಾ ಗೊಂದಲಗಳಿದ್ದಲ್ಲಿ ತೋಟಗಾರಿಕಾ ಇಲಾಖೆಯ ಜಿಲ್ಲಾ ಅಥವಾ ತಾಲ್ಲೂಕು ಮಟ್ಟದ ಉಪ ನಿರ್ದೇಶಕರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.

]]>
Fri, 30 Jan 2026 07:49:30 +0530 shivuagrico
Crop insurance&ಇಲ್ಲಿಯವರೆಗೆ 43 ಲಕ್ಷ ರೈತರಿಗೆ 5534 ಕೋಟಿ ಬೆಳೆವಿಮೆ ಹಣ ಬಿಡುಗಡೆ&ಕೃಷಿ ಸಚಿವ ಚೆಲುವರಾಯಸ್ವಾಮಿ https://krushirushi.in/crop-insurance-2411 https://krushirushi.in/crop-insurance-2411 Bele vime-ಇಲ್ಲಿಯವರೆಗೆ 43 ಲಕ್ಷ ರೈತರಿಗೆ 5534 ಕೋಟಿ ಬೆಳೆವಿಮೆ ಹಣ ಬಿಡುಗಡೆ-ಕೃಷಿ ಸಚಿವ ಚೆಲುವರಾಯಸ್ವಾಮಿ


 ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2022-23 ರಿಂದ 2024-25ನೇ ಸಾಲಿನವರೆಗೆ ಒಟ್ಟು 13,728 ರೈತರು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೊಂದಾಯಿಸಿಕೊಂಡಿದ್ದಾರೆ. ಈ ಪೈಕಿ 945 ರೈತರಿಗೆ ವಿವಿಧ ಕಾರಣಗಳಿಂದ ಬೆಳೆ ವಿಮೆ ಪರಿಹಾರ ಜಮೆಯಾಗಿರುವುದಿಲ್ಲ.

ಸಮಸ್ಯೆಗಳನ್ನು ಪರಿಹರಿಸಿ ಸರ್ಕಾರ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಬುಧವಾರ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಬೆಳೆವಿಮೆ ಪರಿಹಾರ ಬಾಕಿ ಇರುವ 945 ರೈತರ ಪೈಕಿ ಎನ್.ಪಿ.ಸಿ.ಐ ಸೀಡಿಂಗ್, ಆಧಾರ್ ಕಾರ್ಡ್ ನಿಷ್ಕ್ರೀಯತೆ, ಅಮಾನ್ಯವಾದ ಬ್ಯಾಂಕ್ ಖಾತೆ ಸೇರಿದಂತೆ ತಾಂತ್ರಿಕ ಕಾರಣಗಳಿಂದಾಗಿ ಒಟ್ಟು 133 ರೈತರಿಗೆ ರೂ.40.09 ಲಕ್ಷ ಪರಿಹಾರ ಹಣ ಜಮೆಯಾಗದೆ ಹಿಂದಿರುಗಿದೆ.

ಬೆಳೆ ಕಟಾವು ಇಳುವರಿ ಪ್ರಯೋಗ ವ್ಯತ್ಯಾಸದ ಹಿನ್ನಲೆಯಲ್ಲಿ 798 ಬೆಳೆ ಹೊಂದಾಣಿಕೆಯಾಗದೇ ಹಾಗೂ ಮಾರ್ಗಸೂಚಿಯನುಸಾರ ಬೆಳೆ ಕಟಾವು ಪ್ರಯೋಗಗಳ ಇಳುವರಿ ಲಭ್ಯವಿಲ್ಲದ ಕಾರಣ 14 ರೈತರಿಗೆ ಪರಿಹಾರ ಪಾವತಿ ಬಾಕಿಯಿದೆ. 2025-26ರ ಮುಂಗಾರು ಹಂಗಾಮಿನಲ್ಲಿ ಮಿಮೆ ಮಾಡಿಸುವ ರೈತರ ಸಂಖ್ಯೆ ಹೆಚ್ಚಾಗಿದ್ದು, ಕಲಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 10,054 ರೈತರು ನೋಂದಾಯಿಸಿಕೊಂಡಿದ್ದಾರೆ. ಮಧ್ಯಂತರ ಬೆಳೆ ವಿಮೆ ನಷ್ಟ ಪರಿಹಾರದಡಿ ಒಟ್ಟು 9861 ರೈತರಿಗೆ ರೂ.906.32 ಲಕ್ಷಗಳ ಬೆಳೆ ವಿಮೆ ಪರಿಹಾರ ಲೆಕ್ಕಾಚಾರ ಮಾಡಲಾಗಿದ್ದು, ವಿಮಾ ಸಂಸ್ಥೆಯವರಿಂದ ಪರಿಹಾರ ಇತ್ಯರ್ಥ ಪ್ರಕ್ರಿಯೆಯಲ್ಲಿದೆ.

ಕಲಬುರಗಿ ಜಿಲ್ಲೆಗೆ ಮಧ್ಯಂತರ ಬೆಳೆ ವಿಮೆ ನಷ್ಟ ಪರಿಹಾರದಡಿ ರೂ.990 ಕೋಟಿ ಪರಿಹಾರವನ್ನು ನೀಡಲಾಗಿದೆ. ರಾಜ್ಯದ ಎಲ್ಲಾ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ರೈತರಿಗೆ ಬೆಳೆಮಿಮೆ ನೊಂದಣಿಗೆ ಪ್ರೋತ್ಸಾಹಿಸಬೇಕು. ಇದರಿಂದ ರೈತರಿಗೆ ಯಾವುದೇ ನಷ್ಟವಿಲ್ಲ. ವಿಮೆ ಮೊತ್ತ ಶೇ.2 ರಷ್ಟು ಮಾತ್ರ ರೈತರು ಪಾವತಿಸಬೇಕು. ಉಳಿದ ಬೆಳೆ ವಿಮೆ ಮೊತ್ತವನ್ನು ಸರ್ಕಾರ ಪಾವತಿಸುತ್ತದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರ ನೋಂದಣಿಯಿಂದ ಪ್ರಾರಂಭವಾಗಿ ಪರಿಹಾರ ವಿತರಣೆಯವರೆಗೆ ಸಂಪೂರ್ಣ ಪ್ರಕ್ರಿಯೆಯನ್ನು ಸಂರಕ್ಷಣೆ ಪೋರ್ಟಲ್ ಮೂಲಕವೇ ನಿರ್ವಹಿಸಲಾಗುತ್ತದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ವಿಶೇಷವಾಗಿ ಕಪ್ & ಕ್ಯಾಪ್ ಮಾದರಿಯಲ್ಲಿ ವಿಮೆ ಪರಿಹಾರವನ್ನು ನಿರ್ಧರಿಸಲು ಕ್ತಮ ಕೈಕೊಂಡಿರುವುದರಿಂದ ವಿಮೆ ಪರಿಹಾರ ವಿತರಣೆಯಲ್ಲಿ ಸುಧಾರಣೆಯನ್ನು ತರಲಾಗಿದೆ. ಈ ಕುರಿತು ವಿಮಾ ಕಂಪನಿ ಅಧಿಕಾರಿಗಳೊಂದಿಗೆ ಹಲವು ಬಾರಿ ಸಭೆ ನಡೆಸಿರುವುದಲ್ಲದೇ, ಕ್ರಾಪ್ ಕಟಿಂಗ್ ಎಕ್ಸಪರಿಮೇಟ್ ಸರಿಯಾಗಿ ಹಾಗೂ ವೈಜ್ಞಾನಿಕವಾಗಿ ನಡೆಸಬೇಕೆಂದು ಸೂಚನೆ ನೀಡಲಾಗಿದ್ದರ ಪರಿಣಾಮ ರಾಜ್ಯದಲ್ಲಿ ಬೆಳೆ ವಿಮೆ ಯೋಜನೆಯನ್ನು ಅತ್ಯಂತ ಯಶ್ವಸಿಯಾಗಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು..

ಈ ಮೂರು ವರ್ಷಗಳಲ್ಲಿ ಎಲ್ಲಾ ಹಂಗಾಮುಗಳಲ್ಲಿ ರಾಜ್ಯದಲ್ಲಿ ಒಟ್ಟು 73 ಲಕ್ಷ ರೈತರು ವಿಮೆ ಹಣ ಪಾವತಿಸಿ ನೊಂದಾಯಿಸಿಕೊಂಡವರ ಪೈಕಿ ಶೇ ಅಂದಾಜು 60% ರಷ್ಟು ರೈತರು, 43 ಲಕ್ಷ ನೊಂದಾಯಿಸಿಕೊಂಡ ರೈತರಿಗೆ ಒಟ್ಟು 5534 ಕೋಟಿ ರೂಪಾಯಿಗಳ ವಿಮೆ ಪರಹಾರವನ್ನು ನೀಡಿ ರೈತರ ಸಂಕಷ್ಟದ ಸಮಯದಲ್ಲಿ ನಮ್ಮ ಸರ್ಕಾರ ರೈತರಿಗೆ ವಿಮೆ ಪರಿಹಾರ ನೀಡುವಲ್ಲಿ ಇತಿಹಾಸ ನಿರ್ಮಿಸಿದೆ ಎಂದು ಚಲುವರಾಯಸ್ವಾಮಿಯವರು ತಿಳಿಸಿದರು..

ಇನ್ನೂ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ, ಕಲಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2022- 23 ನೇ ಸಾಲಿನಿಂದ 2025-26 ನೇ ಸಾಲಿನ ಮುಂಗಾರು ಹಂಗಾಮಿನವರೆಗೆ ಒಟ್ಟು 23782 ರೈತರು 31338.13 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆ ವಿಮೆಗೆ ನೊಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ 5 ಲಕ್ಷದ 5 ಸಾವಿರ ರೈತರಿಗೆ 990 ಕೋಟಿ ರೂಪಾಯಿ ಬೆಳೆ ವಿಮಾ ಪರಿಹಾರ ಹಣ ನೀಡಲಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು.

ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

 ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Thu, 29 Jan 2026 07:44:26 +0530 shivuagrico
Karnataka weather report&ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ಕಡೆ ಮಳೆ ಇನ್ನೊಂದು ಕಡೆ ವಿಪರೀತ ಚಳಿ https://krushirushi.in/Karnataka-weather-report-2410 https://krushirushi.in/Karnataka-weather-report-2410 Karnataka weather report-ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ರಾಜ್ಯದ ಒಳನಾಡಿನಲ್ಲಿ ಚಳಿ ತಿವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ದಕ್ಷಿಣ ಕರ್ನಾಟಕದಲ್ಲಿ ಚಳಿ ಅಲ್ಪ ಪ್ರಮಾಣದಲ್ಲಿ ಕಡಿಮೆ ಆಗಲಿದೆ. ಹಲವೆಡೆ ಮಳೆ ಮುನ್ಸೂಚನೆ ಸಿಕ್ಕಿದೆ.


ಜನವರಿ 26 ಸೋಮವಾರದಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಬಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಳಿದಂತೆ ಬಳ್ಳಾರಿ, ಬೆಂಗಳೂರು ನಗರ- ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಇದಲ್ಲದೆ ಜನವರಿ 27 ರಿಂದ ಜನವರಿ 31 ರವರೆಗೂ ಒಣಹವೆ ಇರಲಿದೆ.

ಬೆಂಗಳೂರು ಹವಾಮಾನ
ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದೆ. ಬೆಳಗ್ಗೆ ಮಂಜು ಕವಿದ ವಾತಾವರಣ ಹಾಗೂ ತೀವ್ರ ಚಳಿ ಇರಲಿದೆ. ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ವಾತಾವರಣ ಇರಲಿದೆ.

ಹವಾಮಾನ ಸ್ಥಿತಿ:

ತಮಿಳುನಾಡು- ಶ್ರೀಲಂಕಾದ ಪಕ್ಕದ ಬಂಗಾಳಕೊಲ್ಲಿಯಲ್ಲಿ ಉಷ್ಣವಲಯ ಹರಡಿದೆ.

ರಾಜ್ಯದ ವಾತಾವರಣ ಮುನ್ಸೂಚನೆ

ಕರ್ನಾಟಕದ ಒಳನಾಡಲ್ಲಿ ಕನಿಷ್ಠ ತಾಪಮಾನ ಮತ್ತಷ್ಟು ಕುಸಿಯಲಿದೆ. ದಕ್ಷಿಣ ಕರ್ನಾಟಕದಲ್ಲಿ 3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಲಿದೆ. ಆದರೆ ಒಟ್ಟಾರೆ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಸಂಜೆ ರಾತ್ರಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಜನವರಿ 26ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
28ರಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಬಹುದು. 

ಮಲೆನಾಡು : ರಾಜ್ಯದ ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಜನವರಿ 26ರಂದು ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 28ರಿಂದ ಒಣ ಹವೆ ಮುಂದುವರಿಯಲಿದೆ. 

ಉತ್ತರ ಕನ್ನಡ : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ಈಗಿನಂತೆ ಜನವರಿ 26ರಂದು ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ. ಹಾಗೂ ಮೈಸೂರು ಜಿಲ್ಲೆಗಳಲ್ಲಿ ರಾತ್ರಿ ಅಥವಾ ಮುಂಜಾನೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜನವರಿ 26, 27ರಂದು ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. 

ಬಂಗಾಳಕೊಲ್ಲಿಯ ಉಷ್ಣ ಮಾರುತ ಪರಿಚಲನೆ ಮುಂದುವರಿದಿದ್ದರ ಪರಿಣಾಮದಿಂದ ತಮಿಳುನಾಡು ಕಡೆಯಿಂದ ತೇವಾಂಶ ಭರಿತ ಗಾಳಿಯು ಬೀಸುತ್ತಿರುವುದರಿಂದ ಈ ಮಳೆಯ ವಾತಾವರಣವು ಸೃಷ್ಟಿಯಾಗಿದೆ. ಜೊತೆಗೆ ಛಳಿಯ ಪ್ರಮಾಣವು ಕಡಿಮೆಯಾಗಿದೆ. 

ಉತ್ತರ ಭಾರತದಲ್ಲಿ ಈ ತಿಂಗಳ ಅಂತ್ಯದವರಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

]]>
Mon, 26 Jan 2026 08:09:11 +0530 shivuagrico
Yashsvini yojane 2026&ಯಶಸ್ವಿನಿ ಯೋಜನೆಯಡಿ 5 ಲಕ್ಷದವರೆಗೆ ಉಚಿತ ಚಿಕಿತ್ಸೆ,ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನಿಗದಿ https://krushirushi.in/Yashsvini-yojane-2409 https://krushirushi.in/Yashsvini-yojane-2409 Yashsvini yojane 2026-ಯಶಸ್ವಿನಿ ಯೋಜನೆಯಡಿ 5 ಲಕ್ಷದವರೆಗೆ ಉಚಿತ ಚಿಕಿತ್ಸೆ,ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನಿಗಧಿ

ಕರ್ನಾಟಕ ಸರ್ಕಾರವು ಸಹಕಾರ ಸಂಘಗಳ ಸದಸ್ಯರಿಗಾಗಿ ಜಾರಿಗೆ ತಂದಿರುವ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯು ಗ್ರಾಮೀಣ ಮತ್ತು ನಗರ ಪ್ರದೇಶದ ಸಹಕಾರಿ ಸದಸ್ಯರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಯೋಜನೆಯಾಗಿದೆ. ಯಶಸ್ವಿನಿ ಯೋಜನೆಯು ಸಹಕಾರಿ ಕುಟುಂಬಗಳಿಗೆ ಆಪತ್ಕಾಲದ ಮಿತ್ರನಿದ್ದಂತೆ. ಈ ಯೋಜನೆಯಡಿ 2025-26ನೇ ಸಾಲಿನ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ಮರುಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ಯಶಸ್ವಿನಿ ಆರೋಗ್ಯ ವಿಮೆ ಯೋಜನೆ? ಪ್ರಯೋಜನಗಳೇನು? ನೋಂದಣಿ ಮಾಡುವುದು ಹೇಗೆ? ಇತ್ಯಾದಿ ಮಾಹಿತಿಗಳು ಇಲ್ಲಿವೆ.

ಏನಿದು ಯಶಸ್ವಿನಿ ಆರೋಗ್ಯ ಯೋಜನೆ?

ಯಶಸ್ವಿನಿ ಆರೋಗ್ಯ ಯೋಜನೆಯು ಕರ್ನಾಟಕ ಸರ್ಕಾರದ ಒಂದು ಮಹತ್ವಾಕಾಂಕ್ಷೆಯ ನಗದು ರಹಿತ ಚಿಕಿತ್ಸಾ ಯೋಜನೆಯಾಗಿದೆ. ಇದು ರಾಜ್ಯದ ಸಹಕಾರ ಸಂಘಗಳ ಸದಸ್ಯರು ಮತ್ತು ಅವರ ಕುಟುಂಬದವರಿಗೆ ಅಲ್ಪ ಮೊತ್ತದ ವಾರ್ಷಿಕ ವಂತಿಗೆಯೊಂದಿಗೆ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ಒದಗಿಸುತ್ತದೆ. ಈ ಯೋಜನೆಯಡಿ ನೋಂದಾಯಿತ ಫಲಾನುಭವಿಗಳು ರಾಜ್ಯಾದ್ಯಂತ ಇರುವ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ವರ್ಷಕ್ಕೆ ಗರಿಷ್ಠ 5 ಲಕ್ಷ ರೂ.ದವರೆಗೆ ಸುಮಾರು 2,128 ಕ್ಕೂ ಹೆಚ್ಚು ವಿವಿಧ ರೀತಿಯ ಶಸ್ತ್ರಚಿಕಿತ್ಸೆ ಮತ್ತು ICU ಚಿಕಿತ್ಸೆಗಳನ್ನು ಪಡೆಯಬಹುದು. ರಾಜ್ಯದ ಎಲ್ಲಾ ಸಹಕಾರಿಗಳ ಮತ್ತು ರೈತರ ನಿರಂತರ ಒತ್ತಾಯ ಹಾಗೂ ಬೇಡಿಕೆ ಪರಿಗಣಿಸಿ ಈ ಹಿಂದೆ 2018ರಲ್ಲಿ ಸ್ಥಗಿತಗೊಳಿಸಿದ್ದ ಯಶಸ್ವಿನಿ ಯೋಜನೆಯನ್ನು ಪುನರ್ ಜಾರಿಗೊಳಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿ, 2022-23ನೇ ಸಾಲಿನ ಆಯವ್ಯಯದಲ್ಲಿ ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ಘೋಷಣೆ ಮಾಡಿದೆ. ಯೋಜನೆ ಜಾರಿಗಾಗಿ “ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್”ಅನ್ನು ರಚಿಸಿದ್ದು, ಇದಕ್ಕೆ ಮಾನ್ಯ ಮುಖ್ಯಮಂತ್ರಿಗಳು ಮಹಾ ಪೋಷಕರಾಗಿ, ಸಹಕಾರ ಸಚಿವರು ಪೋಷಕರಾಗಿ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಸಹಕಾರ ಇಲಾಖೆ ಇವರು ಟ್ರಸ್ಟ್‌ನ ಅಧ್ಯಕ್ಷರಾಗಿರುತ್ತಾರೆ.

ಯೋಜನೆಯ ಪ್ರಮುಖ ಸೌಲಭ್ಯಗಳು

  • ನಗದು ರಹಿತ ಚಿಕಿತ್ಸೆ: ಯಶಸ್ವಿನಿ ಯೋಜನೆಯಡಿ ಫಲಾನುಭವಿಗಳು ಆಸ್ಪತ್ರೆಗೆ ದಾಖಲಾದಾಗ ಯಾವುದೇ ಹಣ ಪಾವತಿಸುವ ಅಗತ್ಯವಿರುವುದಿಲ್ಲ; ಕೇವಲ ಯಶಸ್ವಿನಿ ಕಾರ್ಡ್ ತೋರಿಸುವ ಮೂಲಕ ನೇರವಾಗಿ ನಗದು ರಹಿತ ಚಿಕಿತ್ಸೆ ಪಡೆಯಬಹುದು.
  • ವಾರ್ಷಿಕ ಚಿಕಿತ್ಸಾ ಮಿತಿ: ಈ ಯೋಜನೆಯಡಿ ನೋಂದಾಯಿತ ಒಂದು ಕುಟುಂಬಕ್ಕೆ ಒಂದು ವರ್ಷಕ್ಕೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಆಗುವ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ.
  • ಚಿಕಿತ್ಸೆಗಳ ಲಭ್ಯತೆ: ಯೋಜನೆಯಲ್ಲಿ ಸುಮಾರು 1,650 ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗಳು ಮತ್ತು ಐಸಿಯು (ICU) ಸೇರಿದಂತೆ ಒಟ್ಟು 2,128 ವಿವಿಧ ರೀತಿಯ ವೈದ್ಯಕೀಯ ಚಿಕಿತ್ಸೆಗಳು ಲಭ್ಯವಿವೆ.
  • ಆಸ್ಪತ್ರೆಗಳ ಜಾಲ: ಈ ಸೌಲಭ್ಯವು ರಾಜ್ಯಾದ್ಯಂತ ಇರುವ ನೂರಾರು ನೋಂದಾಯಿತ ಸರ್ಕಾರಿ ಮತ್ತು ಖಾಸಗಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಮಾತ್ರ ದೊರೆಯಲಿದ್ದು, ಸದಸ್ಯರು ಚಿಕಿತ್ಸೆಗೂ ಮುನ್ನ ಆಸ್ಪತ್ರೆಯು ಈ ಯೋಜನೆಗೆ ಒಳಪಟ್ಟಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು.

ಸದಸ್ಯತ್ವ ಪಡೆಯಲು ಅರ್ಹತೆಗಳು

  • ಕರ್ನಾಟಕ ರಾಜ್ಯದ ಯಾವುದೇ ನೋಂದಾಯಿತ ಸಹಕಾರ ಸಂಘದಲ್ಲಿ ಕನಿಷ್ಠ 3 ತಿಂಗಳಿಂದ ಸದಸ್ಯರಾಗಿರುವವರು ಈ ಯೋಜನೆಗೆ ಅರ್ಹರು; ಆದರೆ ಹೊಸದಾಗಿ ಅಸ್ತಿತ್ವಕ್ಕೆ ಬಂದ ಸಂಘಗಳ ಸದಸ್ಯರಿಗೆ ಕೇವಲ 1 ತಿಂಗಳ ಸದಸ್ಯತ್ವವಿದ್ದರೂ ಅರ್ಜಿ ಸಲ್ಲಿಸಲು ಅವಕಾಶವಿದೆ.
  • ಸಹಕಾರ ಸಂಘಗಳಲ್ಲಿ ಕನಿಷ್ಠ 3 ವರ್ಷಗಳ ಕಾಲ ನಿರಂತರ ಸೇವೆ ಸಲ್ಲಿಸಿರುವ ಮತ್ತು ಮಾಸಿಕ 30,000 ರೂಪಾಯಿಗಳಿಗಿಂತ ಕಡಿಮೆ ಒಟ್ಟು ವೇತನ ಪಡೆಯುತ್ತಿರುವ ನೌಕರರು ಈ ಯೋಜನೆಯ ಲಾಭ ಪಡೆಯಬಹುದು.
  • ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿದಾರರಿಗೆ ಗರಿಷ್ಠ 75 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
  • ಈ ಯೋಜನೆಯ ಪ್ರಯೋಜನವು ಕೇವಲ ಮೂಲ ಸದಸ್ಯರಿಗೆ ಮಾತ್ರವಲ್ಲದೆ ಅವರ ಕುಟುಂಬದ ಸದಸ್ಯರಾದ ಪತಿ ಅಥವಾ ಪತ್ನಿ, ಮಕ್ಕಳು ಮತ್ತು ಆಶ್ರಿತ ಪೋಷಕರಿಗೂ ದೊರೆಯುತ್ತದೆ.

ಯಾರು ಅರ್ಹರಲ್ಲ?

ಸರ್ಕಾರಿ ನೌಕರರು, ಖಾಸಗಿ ಕಂಪನಿಯಲ್ಲಿ 30,000 ರೂ.ಕ್ಕಿಂತ ಹೆಚ್ಚು ವೇತನ ಪಡೆಯುವವರು ಮತ್ತು ಈಗಾಗಲೇ ಬೇರೆ ಆರೋಗ್ಯ ವಿಮೆ ಹೊಂದಿರುವವರು ಈ ಯೋಜನೆಗೆ ಅರ್ಹರಲ್ಲ.

ವಂತಿಗೆ ಮೊತ್ತ ಎಷ್ಟು?

  • ಗ್ರಾಮೀಣ ಭಾಗದ ಸಹಕಾರ ಸಂಘಗಳ ಸದಸ್ಯರ ಗರಿಷ್ಠ ನಾಲ್ಕು ಜನರ ಕುಟುಂಬಕ್ಕೆ ವರ್ಷಕ್ಕೆ 500 ರೂ. ವಂತಿಗೆ ನಿಗದಿಪಡಿಸಲಾಗಿದೆ. ಒಂದು ವೇಳೆ ಕುಟುಂಬದಲ್ಲಿ ನಾಲ್ಕಕ್ಕಿಂತ ಹೆಚ್ಚು ಸದಸ್ಯರಿದ್ದರೆ, ಪ್ರತಿ ಹೆಚ್ಚುವರಿ ಸದಸ್ಯರಿಗೆ ತಲಾ 100 ರೂ. ಪಾವತಿಸಬೇಕಾಗುತ್ತದೆ.
  • ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರ ಗರಿಷ್ಠ ನಾಲ್ಕು ಜನರ ಕುಟುಂಬಕ್ಕೆ ವಾರ್ಷಿಕ 1,000 ರೂ. ವಂತಿಗೆ ಇರುತ್ತದೆ. ಈ ಕುಟುಂಬಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಸದಸ್ಯರಿದ್ದಲ್ಲಿ, ಪ್ರತಿ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ.ರಂತೆ ಹೆಚ್ಚಿನ ಹಣ ಪಾವತಿಸಬೇಕು.
  • SC ಮತ್ತು ST ಸಮುದಾಯದ ಸಹಕಾರಿ ಸದಸ್ಯರಿಗೆ ಈ ಯೋಜನೆಯು ಸಂಪೂರ್ಣ ಉಚಿತವಾಗಿದ್ದು, ಅವರ ವಂತಿಗೆ ಮೊತ್ತವನ್ನು ಸರ್ಕಾರವೇ ಭರಿಸುತ್ತದೆ.
  • ಪರಿಶಿಷ್ಟ ಜಾತಿ ಅಥವಾ ಪಂಗಡದ ಸದಸ್ಯರು ಈ ಸೌಲಭ್ಯ ಪಡೆಯಲು ತಮ್ಮ ಜಾತಿ ಪ್ರಮಾಣ ಪತ್ರದಲ್ಲಿರುವ ಆರ್.ಡಿ (R.D) ಸಂಖ್ಯೆಯನ್ನು ಅರ್ಜಿಯೊಂದಿಗೆ ಕಡ್ಡಾಯವಾಗಿ ನಮೂದಿಸಬೇಕು.

ನಿಯಮಗಳು ಮತ್ತು ನಿಬಂಧನೆಗಳು

  • ಯೋಜನೆಯ ನಿಯಮದಂತೆ ಫಲಾನುಭವಿಗಳು ಆಸ್ಪತ್ರೆಯ ಜನರಲ್ ವಾರ್ಡ್‌ನಲ್ಲಿ ಮಾತ್ರ ಚಿಕಿತ್ಸೆ ಪಡೆಯಲು ಅರ್ಹರಾಗಿರುತ್ತಾರೆ. ಒಂದು ವೇಳೆ ಸದಸ್ಯರು ತಮ್ಮ ಇಚ್ಛೆಯಂತೆ ಸ್ಪೆಷಲ್ ವಾರ್ಡ್ ಅಥವಾ ಸೆಮಿ-ಸ್ಪೆಷಲ್ ವಾರ್ಡ್ ಬಯಸಿದಲ್ಲಿ, ಅದರ ಹೆಚ್ಚುವರಿ ವೆಚ್ಚವನ್ನು ಅವರೇ ಪಾವತಿಸಬೇಕಾಗುತ್ತದೆ.
  • ಮೊಣಕಾಲು ಚಿಪ್ಪು ಬದಲಾವಣೆ ಅಥವಾ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯ ಲೆನ್ಸ್‌ಗಳಂತಹ ಇಂಪ್ಲಾಂಟ್ಸ್‌ಗಳ ಮೂಲ ದರವು ಯೋಜನೆಯ ಪ್ಯಾಕೇಜ್‌ನಲ್ಲಿ ಸೇರಿರುತ್ತದೆ. ಆದರೆ ಸದಸ್ಯರು ಉನ್ನತ ದರ್ಜೆಯ ಅಥವಾ ಹೆಚ್ಚಿನ ಬೆಲೆಯ ಇಂಪ್ಲಾಂಟ್ಸ್‌ಗಳನ್ನು ಬಳಸಲು ಬಯಸಿದರೆ, ಪ್ಯಾಕೇಜ್ ದರಕ್ಕಿಂತ ಹೆಚ್ಚಿನದಾದ ವ್ಯತ್ಯಾಸದ ಮೊತ್ತವನ್ನು ಸ್ವತಃ ಭರಿಸಬೇಕು.
  • ಈ ಯೋಜನೆಯಡಿ ಹೆರಿಗೆ ಸೌಲಭ್ಯವು ಕೇವಲ ಎರಡು ಜೀವಂತ ಮಕ್ಕಳಿಗೆ ಅಥವಾ ಗರಿಷ್ಠ ಎರಡು ಹೆರಿಗೆಗಳಿಗೆ ಮಾತ್ರ ಸೀಮಿತವಾಗಿರುತ್ತದೆ.
  • ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಹೊರ ರೋಗಿಯಾಗಿ ಚಿಕಿತ್ಸೆ ಪಡೆಯುವಾಗ (ಮೂರು ತಿಂಗಳ ಅವಧಿಗೆ) ಗರಿಷ್ಠ 200 ರೂ. ಶುಲ್ಕ ನಿಗದಿಪಡಿಸಲಾಗಿದ್ದು, ಈ ಪೈಕಿ 100 ರೂ. ಗಳನ್ನು ಯಶಸ್ವಿನಿ ಟ್ರಸ್ಟ್ ಭರಿಸುತ್ತದೆ.

    ಯಾವೆಲ್ಲಾ ಚಿಕಿತ್ಸೆಗಳು ಲಭ್ಯ?

    • ಹೃದಯ ಮತ್ತು ಸಾಮಾನ್ಯ ರೋಗಗಳು: ಹೃದಯ ಸಂಬಂಧಿ ಕಾಯಿಲೆಗಳು, ಸಾಮಾನ್ಯ ಶಾರೀರಿಕ ಕಾಯಿಲೆಗಳು ಮತ್ತು ಅವುಗಳಿಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗಳು.
    • ಮೂಳೆ ಮತ್ತು ನರ ರೋಗಗಳು: ಮೂಳೆ ರೋಗಗಳು, ನರವೈಜ್ಞಾನಿಕ ಶಸ್ತ್ರಚಿಕಿತ್ಸೆ ಮತ್ತು ನರ ಸಂಬಂಧಿತ ಕಾಯಿಲೆಗಳು.
    • ಕ್ಯಾನ್ಸರ್ ಮತ್ತು ನಾಳೀಯ ಚಿಕಿತ್ಸೆ: ಶಸ್ತ್ರಚಿಕಿತ್ಸಾ ಆಂಕೊಲಾಜಿ ಮತ್ತು ನಾಳೀಯ ಶಸ್ತ್ರಚಿಕಿತ್ಸೆ .
    • ವಿಶೇಷ ವಿಭಾಗಗಳು: ಕಿವಿ, ಮೂಗು ಮತ್ತು ಗಂಟಲು ರೋಗಗಳು ಹಾಗೂ ಕಣ್ಣಿನ ಕಾಯಿಲೆಗಳ ಚಿಕಿತ್ಸೆ.
    • ಮಹಿಳೆ ಮತ್ತು ಮಕ್ಕಳ ಚಿಕಿತ್ಸೆ: ಪ್ರಸೂತಿ ಮತ್ತು ಸ್ತ್ರೀರೋಗಗಳು, ಯುರೋಲಜಿ, ಹಾಗೂ ನವಜಾತ ಶಿಶು ಮತ್ತು ಮಕ್ಕಳ ಚಿಕಿತ್ಸೆ.
    • ತುರ್ತು ಮತ್ತು ಅಪಘಾತ ಪ್ರಕರಣಗಳು: ನಾಯಿ ಕಡಿತ ಮತ್ತು ಹಾವು ಕಡಿತಕ್ಕೆ ಚಿಕಿತ್ಸೆ. ಕೃಷಿ ಉಪಕರಣಗಳನ್ನು ಬಳಸುವಾಗ ಸಂಭವಿಸುವ ಅಪಘಾತಗಳು. ಕೆಲವು ನಿರ್ದಿಷ್ಟ ರೀತಿಯ ಸುಟ್ಟಗಾಯಗಳು. ಇತರ ಸಾಮಾನ್ಯ ತುರ್ತು ವೈದ್ಯಕೀಯ ಪರಿಸ್ಥಿತಿಗಳು ಇತ್ಯಾದಿ.

    ನೋಂದಣಿಗೆ ಕೊನೆಯ ದಿನಾಂಕ ಎಂದು?

    ಈ ಯೋಜನೆಯಡಿ 2026ರ ಜನವರಿ 03ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 31, 2026 ಕೊನೆಯ ದಿನಾಂಕವಾಗಿದೆ. ನೋಂದಾಯಿತ ಸದಸ್ಯರಿಗೆ ಮಾರ್ಚ್ 01, 2026ರಿಂದ ಯಶಸ್ವಿನಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಲಾಗುವುದು ಮತ್ತು ಈ ಕಾರ್ಡ್ ಬಳಸಿ ಚಿಕಿತ್ಸೆ ಪಡೆಯುವ ಅವಧಿಯು ಏಪ್ರಿಲ್ 01, 2026 ರಿಂದ ಮಾರ್ಚ್ 31, 2027 ರವರೆಗೆ ಇರುತ್ತದೆ. ಆದ್ದರಿಂದ ಅರ್ಹ ಸದಸ್ಯರು ತಡಮಾಡದೆ ತಮ್ಮ ಹತ್ತಿರದ ಸಹಕಾರ ಸಂಘಗಳಲ್ಲಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ.

ಯೋಜನೆಗೆ ನೋಂದಣಿ ಮಾಡುವುದು ಹೇಗೆ?

  • ನೀವು ಸದಸ್ಯರಾಗಿರುವ ಅಥವಾ ಷೇರು ಹೊಂದಿರುವ ನಿಮ್ಮ ಹತ್ತಿರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸಹಕಾರಿ ಬ್ಯಾಂಕ್ ಅಥವಾ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಭೇಟಿ ನೀಡಿ.
  • ಸಂಘದ ಕಚೇರಿಯಲ್ಲಿ ಲಭ್ಯವಿರುವ 'ಯಶಸ್ವಿನಿ ನೋಂದಣಿ ಅರ್ಜಿ'ಯನ್ನು ಪಡೆದು, ಕುಟುಂಬದ ಎಲ್ಲಾ ಸದಸ್ಯರ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.
  • ಅರ್ಜಿಯೊಂದಿಗೆ ಕುಟುಂಬದ ಪ್ರತಿಯೊಬ್ಬ ಸದಸ್ಯರ ಆಧಾರ್ ಕಾರ್ಡ್ ಪ್ರತಿ, ರೇಷನ್ ಕಾರ್ಡ್ ಪ್ರತಿ ಮತ್ತು ತಲಾ 2 ಇತ್ತೀಚಿನ ಭಾವಚಿತ್ರಗಳನ್ನು (Photos) ನೀಡಿ.
  • ತಮ್ಮ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ (ಗ್ರಾಮೀಣ ಭಾಗದವರಿಗೆ 500 ರೂ., ನಗರ ಭಾಗದವರಿಗೆ 1,000 ರೂ. ನಿಗದಿತ ವಂತಿಗೆ ಮೊತ್ತವನ್ನು ಸಂಘದ ಕಚೇರಿಯಲ್ಲಿ ಪಾವತಿಸಿ ರಸೀದಿ ಪಡೆಯಿರಿ.
  • ಅರ್ಜಿಯನ್ನು ಸಲ್ಲಿಸಿದ ನಂತರ ನಿಮ್ಮ ಮೊಬೈಲ್ ಸಂಖ್ಯೆಗೆ ನೋಂದಣಿಯ ಬಗ್ಗೆ ಸಂದೇಶ ಬರಲಿದೆ. ಮಾರ್ಚ್ 1ರ ನಂತರ ನಿಮ್ಮ ಸಹಕಾರ ಸಂಘದ ಮೂಲಕವೇ ಪ್ಲಾಸ್ಟಿಕ್ ಯಶಸ್ವಿನಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬಹುದು. ಕಾರ್ಡ್ ಕಳೆದುಕೊಂಡರೆ 250 ರೂ. ಪಾವತಿಸಿ ಡೂಪ್ಲಿಕೇಟ್ ಕಾರ್ಡ್ ಪಡೆಯಬಹುದು.



ಅಗತ್ಯ ವಿರುವ ದಾಖಲೆಗಳು

  • ಆಧಾರ್ ಕಾರ್ಡ್
  • ಪಡಿತರ ಚೀಟಿ
  • ಸಹಕಾರ ಸಂಘದ ಸದಸ್ಯತ್ವ ಪುರಾವೆ
  • ಕುಟುಂಬದ ಪ್ರತಿಯೊಬ್ಬ ಸದಸ್ಯರ 2 ಭಾವಚಿತ್ರಗಳು
  • ಸದಸ್ಯರ ಮೊಬೈಲ್ ಸಂಖ್ಯೆ
]]>
Sun, 25 Jan 2026 09:27:02 +0530 shivuagrico
Bele sala&ಸಾಲ ತೀರಿಸಿದರೂ ಪಹಣಿಯಲ್ಲಿ ಸಾಲ ತೋರಿಸುತ್ತಿದೆಯೇ? ಮೊಬೈಲ್‌ನಲ್ಲೇ ಚೆಕ್ ಮಾಡಿ ಹಾಗೂ ಹೀಗೆ ಮಾಡಿ https://krushirushi.in/Bele-sala-2408 https://krushirushi.in/Bele-sala-2408 Bele sala-ಸಾಲ ತೀರಿಸಿದರೂ ಪಹಣಿಯಲ್ಲಿ ಸಾಲ ತೋರಿಸುತ್ತಿದೆಯೇ? ಮೊಬೈಲ್‌ನಲ್ಲೇ ಚೆಕ್ ಮಾಡಿ ಹಾಗೂ ಹೀಗೆ ಮಾಡಿ

ಮೊದದೆಲ್ಲಾ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲವಿದೆ ಎಂದು ತಿಳಿಯಲು ಬ್ಯಾಂಕ್‌ಗಳಿಗೂ ಅಥವಾ ಕಂದಾಯ ಕಚೇರಿಗಳಿಗೂ ಅಲೆಯಬೇಕಿತ್ತು. ಆದರೆ ಈಗ ನಿಮ್ಮ ಕೈಯಲ್ಲಿರುವ ಮೊಬೈಲ್ ಮತ್ತು ಇಂಟರ್ನೆಟ್ ಸೌಲಭ್ಯವಿದ್ದರೆ ಸಾಕು, ಕೇವಲ 2 ನಿಮಿಷದಲ್ಲಿ ನಿಮ್ಮ ಜಮೀನಿನ ವಿವರವನ್ನು ನೀವೇ ನೋಡಬಹುದು.

ನಿಮ್ಮ ಆಸ್ತಿಯ ದಾಖಲೆಗಳು 'ಕ್ಲೀನ್' ಆಗಿದ್ದಾಗ ಮಾತ್ರ ನೆಮ್ಮದಿಯಿಂದ ಇರಲು ಸಾಧ್ಯ. ಆದರೆ ತಾಂತ್ರಿಕ ದೋಷ ಅಥವಾ ಮಾಹಿತಿ ಕೊರತೆಯಿಂದಾಗಿ ಪಹಣಿ (RTC) ಪತ್ರದಲ್ಲಿ ಸಾಲದ ವಿವರಗಳು ತಪ್ಪಾಗಿ ನಮೂದಾಗಿರುವ ಸಾಧ್ಯತೆಗಳಿರುತ್ತವೆ. ಇಂತಹ ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಈಗ ನೀವು ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ

ಡಿಜಿಟಲ್ ಕ್ರಾಂತಿಯ ಈ ಕಾಲದಲ್ಲಿ, ನಿಮ್ಮ ಜಮೀನಿನ ಮೇಲೆ ಯಾವ ಬ್ಯಾಂಕಿನಿಂದ ಎಷ್ಟು ಬೆಳೆ ಸಾಲ (Crop Loan) ಪಡೆಯಲಾಗಿದೆ ಎಂಬ ಸಂಪೂರ್ಣ ವಿವರವನ್ನು ನಿಮ್ಮ ಕೈಯಲ್ಲಿರುವ ಮೊಬೈಲ್ ಮೂಲಕವೇ ಕೇವಲ 2 ನಿಮಿಷದಲ್ಲಿ ಪರಿಶೀಲಿಸಬಹುದು.

ಏಕೆ ಈ ಪರಿಶೀಲನೆ ಮುಖ್ಯ?

ನೀವು ಬ್ಯಾಂಕ್‌ಗೆ ಸಾಲ ಮರುಪಾವತಿಸಿದ ನಂತರವೂ ಪಹಣಿಯಲ್ಲಿ 'ಋಣಭಾರ' (Encumbrance) ತೋರಿಸುತ್ತಿದ್ದರೆ ಅದನ್ನು ತಕ್ಷಣ ಸರಿಪಡಿಸಿಕೊಳ್ಳಬಹುದು.

ಕೆಲವು ಪ್ರಕರಣಗಳಲ್ಲಿ ರೈತರಿಗೆ ತಿಳಿಯದೆಯೇ ಅವರ ದಾಖಲೆ ಬಳಸಿ ಬೇರೆಯವರು ಸಾಲ ಪಡೆದ ಉದಾಹರಣೆಗಳಿವೆ. ಇದನ್ನು ಪತ್ತೆ ಹಚ್ಚಲು ಇದು ಸುಲಭ ದಾರಿ.

ಕರ್ನಾಟಕ ಸರ್ಕಾರದ ಭೂಮಿ (Bhoomi) ಪೋರ್ಟಲ್ ಮೂಲಕ ನಿಮ್ಮ ಜಮೀನಿನ ಹಕ್ಕು ಮತ್ತು ಹೊಣೆಗಾರಿಕೆಗಳ ಬಗ್ಗೆ ನಿಖರ ಮಾಹಿತಿ ಪಡೆಯಬಹುದು.

ಮೊಬೈಲ್‌ನಲ್ಲಿ ಸಾಲದ ವಿವರ ಚೆಕ್ ಮಾಡುವುದು ಹೇಗೆ? (Step-by-Step)

ನಿಮ್ಮ ಜಮೀನಿನ ಹಕ್ಕು ಮತ್ತು ಹೊಣೆಗಾರಿಕೆಗಳನ್ನು ತಿಳಿಯಲು ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸಿ:

ಮೊದಲು ನಿಮ್ಮ ಮೊಬೈಲ್ ಬ್ರೌಸರ್‌ನಲ್ಲಿ ಕರ್ನಾಟಕ ಸರ್ಕಾರದ ಅಧಿಕೃತ Bhoomi Online ಪೋರ್ಟಲ್‌ಗೆ ಭೇಟಿ ನೀಡಿ.

ಮುಖಪುಟದಲ್ಲಿ ನಿಮ್ಮ ಜಿಲ್ಲೆ (District), ತಾಲೂಕು (Taluk), ಹೋಬಳಿ (Hobli) ಮತ್ತು ಗ್ರಾಮ (Village) ಅನ್ನು ಸರಿಯಾಗಿ ಆಯ್ಕೆ ಮಾಡಿಕೊಳ್ಳಿ.

ನಿಮ್ಮ ಜಮೀನಿನ ಸರ್ವೆ ನಂಬರ್ (Survey Number) ಟೈಪ್ ಮಾಡಿ 'Go' ಬಟನ್ ಒತ್ತಿ. ನಂತರ ಕಾಣಿಸುವ ಪಟ್ಟಿಯಲ್ಲಿ Surnoc ಮತ್ತು ಹಿಸ್ಸಾ ನಂಬರ್ (Hissa Number) ಆಯ್ಕೆ ಮಾಡಿ.

ಈಗ 'Fetch Details' ಮೇಲೆ ಕ್ಲಿಕ್ ಮಾಡಿ. ಅಲ್ಲಿ ನಿಮ್ಮ ಹೆಸರು ಕಾಣಿಸುತ್ತದೆ, ಅದನ್ನು ಆಯ್ಕೆ ಮಾಡಿ.

ಕೊನೆಯದಾಗಿ 'View RTC' ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪಹಣಿ ಪರದೆಯ ಮೇಲೆ ಕಾಣಿಸುತ್ತದೆ.

ಪಹಣಿಯಲ್ಲಿನ ಕಾಲಂ 9 ಮತ್ತು 11 (Column 9 & 11) ಅನ್ನು ಗಮನಿಸಿ. ಇಲ್ಲಿ ನಿಮ್ಮ ಸಾಲದ ಮೊತ್ತ ಮತ್ತು ಬ್ಯಾಂಕಿನ ಹೆಸರು ನಮೂದಾಗಿರುತ್ತದೆ.

ಸಾಲ ತೀರಿಸಿದರೂ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?

ನೀವು ಬ್ಯಾಂಕ್‌ಗೆ ಪೂರ್ತಿ ಸಾಲ ಕಟ್ಟಿದ್ದರೂ ದಾಖಲೆಗಳಲ್ಲಿ ಇನ್ನೂ ಸಾಲ ಕಾಣಿಸುತ್ತಿದ್ದರೆ, ಅದನ್ನು ಸರಿಪಡಿಸಲು ಈ ಕ್ರಮಗಳನ್ನು ಅನುಸರಿಸಿ:

ನೀವು ಸಾಲ ಪಡೆದ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಮ್ಯಾನೇಜರ್ ಅವರನ್ನು ಭೇಟಿ ಮಾಡಿ.

ನೀವು ಸಾಲ ತೀರಿಸಿದ ರಶೀದಿ ಅಥವಾ 'ಸಾಲ ಮುಕ್ತ ಪತ್ರ' (No Due Certificate) ಅನ್ನು ತೋರಿಸಿ.

ಪಹಣಿಯಲ್ಲಿನ ಸಾಲದ ಎಂಟ್ರಿ ತೆಗೆದುಹಾಕಲು 'Bank Release Order' ನೀಡುವಂತೆ ಬ್ಯಾಂಕಿಗೆ ಮನವಿ ಮಾಡಿ.

ಬ್ಯಾಂಕಿನವರು ಆನ್‌ಲೈನ್ ಮೂಲಕ ಕಂದಾಯ ಇಲಾಖೆಗೆ ಈ ಮಾಹಿತಿ ರವಾನಿಸಿದ ನಂತರ, ನಿಮ್ಮ ಪಹಣಿಯಲ್ಲಿನ ಸಾಲದ ವಿವರ ತಾನಾಗಿಯೇ ಅಳಿಸಿ ಹೋಗುತ್ತದೆ.

Bele sala status-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ-crop loan status 

ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್(Survey number) ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.

 ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ(Bele sala) ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.

 ಸಾಲ(crop loan status)ವಿವರ ಚೆಕ್ ಮಾಡುವುದು ಹೇಗೆ?

 ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು 

https://landrecords.karnataka.gov.in/Service2/

 ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ. 

 ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ

  ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ

ನಂತರ view ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ

ಇದನ್ನೂ ಓದಿ

ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427 

 ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.

 ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.

  ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ.  ಎಂಬ ಮಾಹಿತಿ ಇರುತ್ತದೆ.


 ಈ ಮಾಹಿತಿ ರೈತರಿಗೆ ತುಂಬಾ ಅನುಕೂಲವಾಗಿದೆ ಸರ್ವೇ ನಂಬರ್ ನಮೂದಿಸಿದರೆ ಸಾಕು ರೈತರು ದೇಶದ ಯಾವುದೇ ಮೂಲೆಯಿಂದಲೂ ಮಾಹಿತಿ ಪಡೆಯಬಹುದು. ಕೇವಲ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವ ಮಾಹಿತಿ ಎಲ್ಲವೂ ರೈತರಿಗೆ ಸಿಗಲಿದೆ.

]]>
Sun, 25 Jan 2026 09:24:51 +0530 shivuagrico
One district one product&ನಿಮ್ಮ ರೈಲ್ವೆ ನಿಲ್ದಾಣಗಳಲ್ಲಿ ಒಂದು ಜಿಲ್ಲೆ ಒಂದು ಉತ್ಪನ್ನ ಮಳಿಗೆ ತೆರೆಯುವುದು ಹೇಗೆ? https://krushirushi.in/One-district-one-product-2026 https://krushirushi.in/One-district-one-product-2026 One district one product-ನಿಮ್ಮ ರೈಲ್ವೆ ನಿಲ್ದಾಣಗಳಲ್ಲಿ ಒಂದು ಜಿಲ್ಲೆ ಒಂದು ಉತ್ಪನ್ನ ಮಳಿಗೆ ತೆರೆಯುವುದು ಹೇಗೆ?

ಸ್ಥಳೀಯ ಉತ್ಪನ್ನಗಳಿಗೆ ಸ್ಥಳೀಯವಾಗಿ ಮಾರುಕಟ್ಟೆ ಒದಗಿಸುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ಭಾರತೀಯ ರೈಲ್ವೆಯ 'ಒಂದು ನಿಲ್ದಾಣ ಒಂದು ಉತ್ಪನ್ನ' ಎಂಬ ವಿನೂತನ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯು 'ವೋಕಲ್ ಫಾರ್ ಲೋಕಲ್' (ಸ್ಥಳೀಯತೆಗೆ ಧ್ವನಿ) ಆಶಯದಡಿ ದೇಶದ ಸ್ಥಳೀಯ ಕಲೆ ಮತ್ತು ಕುಶಲಕರ್ಮಿಗಳನ್ನು ಉತ್ತೇಜಿಸುವ ಒಂದು ಕ್ರಾಂತಿಕಾರಿ ಉಪಕ್ರಮವಾಗಿ ಹೊರಹೊಮ್ಮಿದೆ. ಈ ಯೋಜನೆಯು ದೇಶಾದ್ಯಂತ 2,002 ರೈಲ್ವೆ ನಿಲ್ದಾಣಗಳಿಗೆ ವಿಸ್ತರಿಸಲ್ಪಟ್ಟು, 2,326 ಮಳಿಗೆಗಳ ಮೂಲಕ ಸುಮಾರು 1.32 ಲಕ್ಷಕ್ಕೂ ಅಧಿಕ ಕುಶಲಕರ್ಮಿಗಳು, ನೇಕಾರರು ಮತ್ತು ಸಣ್ಣ ಉತ್ಪಾದಕರಿಗೆ ಸುಸ್ಥಿರ ಜೀವನೋಪಾಯವನ್ನು ಕಲ್ಪಿಸಿಕೊಟ್ಟಿದೆ. ರೈಲ್ವೆ ನಿಲ್ದಾಣಗಳನ್ನು ಸ್ಥಳೀಯ ಉದ್ಯಮ ಕೇಂದ್ರಗಳನ್ನಾಗಿ ಪರಿವರ್ತಿಸಿರುವ ಈ ಯೋಜನೆಯು, ಬಿದಿರಿನ ಕಲೆ ಮತ್ತು ಮಣ್ಣಿನ ಪಾತ್ರೆಗಳಿಂದ ಹಿಡಿದು ವಿವಿಧ ಪ್ರಾಂತ್ಯಗಳ ಸಾಂಬಾರ ಪದಾರ್ಥಗಳು, ಕೈಮಗ್ಗದ ಬಟ್ಟೆಗಳು ಮತ್ತು ಸಾಂಪ್ರದಾಯಿಕ ಸಿಹಿತಿಂಡಿಗಳವರೆಗೆ ವೈವಿಧ್ಯಮಯ ಪ್ರಾದೇಶಿಕ ಉತ್ಪನ್ನಗಳಿಗೆ ಲಕ್ಷಾಂತರ ಪ್ರಯಾಣಿಕರ ನೇರ ಮಾರುಕಟ್ಟೆಯನ್ನು ಒದಗಿಸುತ್ತಿದೆ.

ಏನಿದು ಒಂದು ನಿಲ್ದಾಣ ಒಂದು ಉತ್ಪನ್ನ ಯೋಜನೆ?

ಭಾರತ ಸರ್ಕಾರದ ರೈಲ್ವೆ ಸಚಿವಾಲಯವು 2022 ರಲ್ಲಿ ಪ್ರಾರಂಭಿಸಿದ 'ಒಂದು ನಿಲ್ದಾಣ ಒಂದು ಉತ್ಪನ್ನ' ಯೋಜನೆಯು 'ವೋಕಲ್ ಫಾರ್ ಲೋಕಲ್' (ಸ್ಥಳೀಯ ಉತ್ಪನ್ನಗಳಿಗೆ ಧ್ವನಿಯಾಗಿ) ಎಂಬ ದೂರದೃಷ್ಟಿಯಡಿ ರೂಪಿಸಲಾದ ಒಂದು ಪ್ರಮುಖ ಉಪಕ್ರಮವಾಗಿದೆ. ಈ ಯೋಜನೆಯು ರೈಲ್ವೆ ನಿಲ್ದಾಣಗಳನ್ನು ಕೇವಲ ಸಾರಿಗೆ ಕೇಂದ್ರಗಳಾಗಿ ಉಳಿಸದೆ, ಅವುಗಳನ್ನು ಸ್ಥಳೀಯ ಕಲೆ ಮತ್ತು ದೇಶೀಯ ಉತ್ಪನ್ನಗಳ ಪ್ರಚಾರದ ಕೇಂದ್ರಗಳನ್ನಾಗಿ ಪರಿವರ್ತಿಸುವ ಉದ್ದೇಶವನ್ನು ಹೊಂದಿದೆ. ಆ ಮೂಲಕ ಸ್ಥಳೀಯ ಕುಶಲಕರ್ಮಿಗಳು, ನೇಕಾರರು ಮತ್ತು ಸಣ್ಣ ಉತ್ಪಾದಕರಿಗೆ ನೇರ ಮಾರುಕಟ್ಟೆ ಅವಕಾಶವನ್ನು ಕಲ್ಪಿಸಿಕೊಟ್ಟು, ಅವರ ಜೀವನೋಪಾಯಕ್ಕೆ ಸುಸ್ಥಿರವಾದ ಆರ್ಥಿಕ ಆಧಾರವನ್ನು ಒದಗಿಸುವುದು ಈ ಯೋಜನೆಯ ಪ್ರಮುಖ ಗುರಿಯಾಗಿದೆ.

ಯೋಜನೆಯ ಮುಖ್ಯ ಉದ್ದೇಶಗಳು

  • ಸ್ಥಳೀಯ ಕುಶಲಕರ್ಮಿಗಳ ಸಬಲೀಕರಣ: ಈ ಯೋಜನೆಯು ಸಮಾಜದ ಹಿಂದುಳಿದ ವರ್ಗದ ಕುಶಲಕರ್ಮಿಗಳು, ಸ್ವಸಹಾಯ ಸಂಘಗಳು ಮತ್ತು ಸಣ್ಣ ಉತ್ಪಾದಕರಿಗೆ ನೇರ ಮಾರುಕಟ್ಟೆ ಸೌಲಭ್ಯವನ್ನು ಒದಗಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲಗೊಳಿಸುತ್ತದೆ.
  • ಸಂಸ್ಕೃತಿಯ ಸಂರಕ್ಷಣೆ: ಅಳಿವಿನ ಅಂಚಿನಲ್ಲಿರುವ ಭಾರತದ ಸಾಂಪ್ರದಾಯಿಕ ಕಲೆಗಳು ಮತ್ತು ಪ್ರಾದೇಶಿಕ ವಿಶೇಷತೆಗಳನ್ನು ಮರುಪರಿಚಯಿಸುವ ಮೂಲಕ ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಇದು ಸಹಕಾರಿಯಾಗಿದೆ.
  • ಮಧ್ಯವರ್ತಿಗಳಿಲ್ಲದ ವ್ಯಾಪಾರ: ಉತ್ಪಾದಕರು ನೇರವಾಗಿ ರೈಲ್ವೆ ಪ್ರಯಾಣಿಕರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದರಿಂದ, ಮಧ್ಯವರ್ತಿಗಳ ಹಾವಳಿ ತಪ್ಪಿ ಕುಶಲಕರ್ಮಿಗಳಿಗೆ ಹೆಚ್ಚಿನ ಲಾಭ ಮತ್ತು ಉತ್ತಮ ಆದಾಯ ದೊರೆಯುತ್ತದೆ.

ಯಾವೆಲ್ಲಾ ಉತ್ಪನ್ನಗಳನ್ನು ಮಾರಾಟ ಮಾಡಬಹುದು?

  • ಪ್ರತಿಯೊಂದು ಪ್ರದೇಶದ ವಿಶಿಷ್ಟತೆಯನ್ನು ಎತ್ತಿ ತೋರಿಸುವ ಭೌಗೋಳಿಕ ಗುರುತು ಹೊಂದಿರುವ ಉತ್ಪನ್ನಗಳಿಗೆ ಅಥವಾ ಆಯಾ ಸ್ಥಳದಲ್ಲಿ ಅತ್ಯಂತ ಪ್ರಸಿದ್ಧವಾಗಿರುವ ವಸ್ತುಗಳಿಗೆ ಈ ಮಳಿಗೆಗಳಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ.
  • ಸ್ಥಳೀಯ ಕುಶಲಕರ್ಮಿಗಳು ತಯಾರಿಸಿದ ಮಣ್ಣಿನ ಪಾತ್ರೆಗಳು, ಆಕರ್ಷಕ ಬಿದಿರಿನ ಕಲಾಕೃತಿಗಳು ಮತ್ತು ಅತ್ಯಂತ ನೈಪುಣ್ಯತೆಯಿಂದ ಕೂಡಿದ ಮರದ ಕೆತ್ತನೆಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತದೆ; ಉದಾಹರಣೆಗೆ ಕರ್ನಾಟಕದ ಹೆಮ್ಮೆಯ ಚನ್ನಪಟ್ಟಣದ ಬೊಂಬೆಗಳು ಇಲ್ಲಿನ ಪ್ರಮುಖ ಆಕರ್ಷಣೆಯಾಗಿವೆ.
  • ಸಾಂಪ್ರದಾಯಿಕ ಕೈಮಗ್ಗದ ಸೀರೆಗಳಾದ ಇಳಕಲ್ ಮತ್ತು ಕಾಂಚೀಪುರಂ ರೇಷ್ಮೆ ಸೀರೆಗಳ ಜೊತೆಗೆ ಪರಿಸರ ಸ್ನೇಹಿ ಖಾದಿ ಉತ್ಪನ್ನಗಳಿಗೆ ಈ ಯೋಜನೆಯು ವಿಶಾಲವಾದ ಮಾರುಕಟ್ಟೆಯನ್ನು ಒದಗಿಸುತ್ತಿದೆ.
  • ರೈತರು ಮತ್ತು ಸಣ್ಣ ಉತ್ಪಾದಕರು ಬೆಳೆದ ಸ್ಥಳೀಯ ಸಾಂಬಾರ ಪದಾರ್ಥಗಳು, ಚಹಾ, ಕಾಫಿ, ಶುದ್ಧ ಜೇನುತುಪ್ಪ ಮತ್ತು ಪೌಷ್ಟಿಕಾಂಶಯುಕ್ತ ಸಿರಿಧಾನ್ಯಗಳನ್ನು ಪ್ರಯಾಣಿಕರು ನೇರವಾಗಿ ಖರೀದಿಸಲು ಅವಕಾಶವಿದೆ.
  • ಪ್ರತಿ ಪ್ರಾಂತ್ಯದ ವಿಶಿಷ್ಟ ರುಚಿಯನ್ನು ಹೊಂದಿರುವ ಸಾಂಪ್ರದಾಯಿಕ ಸಿಹಿತಿಂಡಿಗಳು ಮತ್ತು ಸ್ಥಳೀಯವಾಗಿ ಸಂಸ್ಕರಿಸಿದ ವಿವಿಧ ಆಹಾರ ಪದಾರ್ಥಗಳು ಈ ಮಳಿಗೆಗಳಲ್ಲಿ ಲಭ್ಯವಿರುತ್ತವೆ.

ಪ್ರಯೋಜನಗಳೇನು?

  • ಈ ಯೋಜನೆಯು ಸ್ಥಳೀಯ ಕುಶಲಕರ್ಮಿಗಳು ಮತ್ತು ನೇಕಾರರಿಗೆ ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ, ಪ್ರತಿದಿನ ರೈಲ್ವೆಯಲ್ಲಿ ಪ್ರಯಾಣಿಸುವ ಲಕ್ಷಾಂತರ ಪ್ರಯಾಣಿಕರನ್ನು ನೇರವಾಗಿ ತಲುಪಲು ಅವಕಾಶ ಮಾಡಿಕೊಡುತ್ತದೆ.
  • ಪ್ರಾದೇಶಿಕ ವಿಶಿಷ್ಟತೆಗಳನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶಿಸುವ ಮೂಲಕ, ಈ ಉಪಕ್ರಮವು ಸರ್ಕಾರದ 'ವೋಕಲ್ ಫಾರ್ ಲೋಕಲ್' ಮತ್ತು 'ಆತ್ಮನಿರ್ಭರ ಭಾರತ' ಕನಸಿಗೆ ನೇರ ಬೆಂಬಲ ನೀಡುತ್ತಿದೆ.
  • ಸಣ್ಣ ಉದ್ಯಮಿಗಳು ಕೇವಲ 1,000 ರೂ. ನಾಮಮಾತ್ರದ ಶುಲ್ಕದಲ್ಲಿ ಮಳಿಗೆಯನ್ನು ಪಡೆದು, ಅತ್ಯಂತ ಕಡಿಮೆ ಅಪಾಯದೊಂದಿಗೆ ತಮ್ಮ ಉತ್ಪನ್ನಗಳ ಮಾರುಕಟ್ಟೆ ಸಾಮರ್ಥ್ಯವನ್ನು ಪರೀಕ್ಷಿಸಬಹುದು.
  • ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿಯೇ ಆಯಾ ಪ್ರಾಂತ್ಯದ ಅಪ್ಪಟ ಸಾಂಬಾರ ಪದಾರ್ಥಗಳು, ಚಹಾ, ಸಾಂಪ್ರದಾಯಿಕ ಉಡುಪುಗಳು ಮತ್ತು ಕಲಾಕೃತಿಗಳನ್ನು ಖರೀದಿಸುವ ವಿಶಿಷ್ಟ ಅನುಭವವನ್ನು ಪಡೆಯುತ್ತಾರೆ.
  • ಈ ಮಳಿಗೆಗಳಲ್ಲಿ ಹೆಚ್ಚಿನವು ಮಹಿಳಾ ಉದ್ಯಮಿಗಳು ಮತ್ತು ಸ್ವಸಹಾಯ ಸಂಘಗಳಿಂದ ನಡೆಸಲ್ಪಡುತ್ತಿದ್ದು, ಇದು ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ನಾಂದಿ ಹಾಡಿದೆ.
  • ಆಯ್ಕೆಯಾದ ಫಲಾನುಭವಿಗಳಿಗೆ ರಾಷ್ಟ್ರೀಯ ವಿನ್ಯಾಸ ಸಂಸ್ಥೆಯು ವಿನ್ಯಾಸಗೊಳಿಸಿದ ಆಕರ್ಷಕ ಮತ್ತು ಸುಸಜ್ಜಿತವಾದ ಕಿಯೋಸ್ಕ್ ಅಥವಾ ಮೊಬೈಲ್ ಸ್ಟಾಲ್‌ಗಳನ್ನು ರೈಲ್ವೆ ಇಲಾಖೆಯ ವತಿಯಿಂದಲೇ ಒದಗಿಸಲಾಗುತ್ತದೆ.

ಮಳಿಗೆ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?

  • ಆಸಕ್ತರು ತಾವು ಮಳಿಗೆ ತೆರೆಯಲು ಇಚ್ಛಿಸುವ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಅಥವಾ ಸ್ಟೇಷನ್ ಮ್ಯಾನೇಜರ್ ಕಚೇರಿಯನ್ನು ಸಂಪರ್ಕಿಸಿ, ನಿಗದಿತ ಅರ್ಜಿ ಫಾರಂ ಅನ್ನು ಭರ್ತಿ ಮಾಡಿ ಸಲ್ಲಿಸಬೇಕು.
  • ಇದು ಅತ್ಯಂತ ಕಡಿಮೆ ವೆಚ್ಚದ ಯೋಜನೆಯಾಗಿದ್ದು, ಸಾಮಾನ್ಯವಾಗಿ 15 ದಿನಗಳ ಕಾಲ ಮಳಿಗೆ ನಡೆಸಲು ಕೇವಲ 1,000 ರೂ.ನಾಮಮಾತ್ರದ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
  • ಒಂದೇ ನಿಲ್ದಾಣಕ್ಕೆ ಒಂದಕ್ಕಿಂತ ಹೆಚ್ಚು ಅರ್ಜಿಗಳು ಬಂದ ಸಂದರ್ಭದಲ್ಲಿ, ಯಾವುದೇ ತಾರತಮ್ಯವಿಲ್ಲದೆ ಪಾರದರ್ಶಕವಾಗಿ 'ಲಾಟರಿ' ಅಥವಾ ಆದ್ಯತೆಯ ಪಟ್ಟಿಯ ಆಧಾರದ ಮೇಲೆ ಮಳಿಗೆಗಳನ್ನು ಹಂಚಿಕೆ ಮಾಡಲಾಗುತ್ತದೆ.

ಮಳಿಗೆ ತೆರೆಯಲು ಯಾರೆಲ್ಲಾ ಅರ್ಹರು?

  • ಸರ್ಕಾರಿ ಪ್ರಾಧಿಕಾರಗಳಿಂದ (ಹ್ಯಾಂಡಿಕ್ರಾಫ್ಟ್ಸ್ ಅಥವಾ ಹ್ಯಾಂಡ್ಲೂಮ್) ಮಾನ್ಯತೆ ಪಡೆದ ಗುರುತಿನ ಚೀಟಿ ಹೊಂದಿರುವವರು ಅಥವಾ ಬುಡಕಟ್ಟು ಸಹಕಾರ ಮಾರುಕಟ್ಟೆ ಅಭಿವೃದ್ದಿ ಸಂಘಟನೆ (TRIFED), ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ನಿಗಮ (NHDC) ಮತ್ತು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ (KVIC) ನಂತಹ ಸಂಸ್ಥೆಗಳಲ್ಲಿ ನೋಂದಾಯಿಸಿಕೊಂಡಿರುವ ಕುಶಲಕರ್ಮಿಗಳಿಗೆ ಆದ್ಯತೆ ನೀಡಲಾಗುತ್ತದೆ.
  • ಕೇಂದ್ರ ಸರ್ಕಾರದ ಪಿಎಂಇಜಿಪಿ ನಂತಹ ಪ್ರಮುಖ ಯೋಜನೆಗಳ ಅಡಿಯಲ್ಲಿ ನೋಂದಾಯಿಸಲ್ಪಟ್ಟಿರುವ ಸ್ವಸಹಾಯ ಸಂಘಗಳು ಈ ಸೌಲಭ್ಯವನ್ನು ಪಡೆಯಲು ಅರ್ಹವಾಗಿರುತ್ತವೆ.
  • ಸಮಾಜದ ಆರ್ಥಿಕವಾಗಿ ಹಿಂದುಳಿದ ಮತ್ತು ದುರ್ಬಲ ವರ್ಗದ ಜನರಿಗೆ ಸ್ವಾವಲಂಬಿ ಜೀವನ ನಡೆಸಲು ಈ ಯೋಜನೆಯಲ್ಲಿ ವಿಶೇಷ ಅವಕಾಶ ಕಲ್ಪಿಸಲಾಗಿದೆ.
  • ರಾಜ್ಯ ಸರ್ಕಾರದ ವಿವಿಧ ಸಂಸ್ಥೆಗಳೊಂದಿಗೆ ಗುರುತಿಸಿಕೊಂಡಿರುವ ವೈಯಕ್ತಿಕ ಉತ್ಪಾದಕರು, ಕುಶಲಕರ್ಮಿಗಳು ಅಥವಾ ಕರಕುಶಲ ಕೆಲಸಗಾರರು ಈ ಯೋಜನೆಯ ಲಾಭ ಪಡೆಯಬಹುದು.

 

ಅಗತ್ಯವಿರುವ ದಾಖಲೆಗಳು

  • ಗುರುತಿನ ಚೀಟಿ
  • ಅರ್ಹತಾ ಪ್ರಮಾಣಪತ್ರ
  • ನೋಂದಣಿ ದಾಖಲೆ
  • ಸ್ಥಳೀಯ ನಿವಾಸಿ ದೃಢೀಕರಣ
  • ಬ್ಯಾಂಕ್ ವಿವರ
  • ಸ್ವಯಂ ಘೋಷಣಾ ಪತ್ರ

]]>
Sat, 24 Jan 2026 08:48:29 +0530 shivuagrico
Thayi lakshmi bond yojane&ತಾಯಿ ಲಕ್ಮಿ ಬಾಂಡ್ ಯೋಜನೆಯಡಿ 50,000 ರೂ.ವರೆಗೆ ಹೆರಿಗೆ ಸಹಾಯಧನ https://krushirushi.in/Thayi-lakshmi-bond-yojane-2026 https://krushirushi.in/Thayi-lakshmi-bond-yojane-2026 Thayi lakshmi bond yojane-ತಾಯಿ ಲಕ್ಮಿ ಬಾಂಡ್ ಯೋಜನೆಯಡಿ 50,000 ರೂ.ವರೆಗೆ ಹೆರಿಗೆ ಸಹಾಯಧನ

ನೀವೆಲ್ಲರೂ ಭಾಗ್ಯಲಕ್ಷ್ಮಿ ಬಾಂಡ್‌ ಬಗ್ಗೆ ಕೇಳಿರುತ್ತೀರಿ. ಅದೇ ರೀತಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನೋಂದಾಯಿತ ಮಹಿಳಾ ಕಾರ್ಮಿಕರಿಗೆ ಹೆರಿಗೆಯ ಸಮಯದಲ್ಲಿ ಆರ್ಥಿಕ ಭದ್ರತೆ ನೀಡಲು ತಾಯಿ ಲಕ್ಷ್ಮೀ ಬಾಂಡ್ ಎಂಬ ವಿಶಿಷ್ಟ ಯೋಜನೆಯನ್ನು ಜಾರಿಗೆ ತಂದಿದೆ. 2022ರ ಮಂಡಳಿಯ ತಿದ್ದುಪಡಿ ನಿಯಮಗಳ ಪ್ರಕಾರ, ಮಹಿಳಾ ಕಾರ್ಮಿಕರ ಹೆಣ್ಣು ಹಾಗೂ ಗಂಡು ಮಗುವಿನ ಜನನಕ್ಕೆ ಸಹಾಯಧನವನ್ನು ಹೆಚ್ಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ಯೋಜನೆ? ಸಹಾಯಧನ ಪಡೆಯುವುದು ಹೇಗೆ? ಎಂಬುದನ್ನು ತಿಳಿಯೋಣ.

ಏನಿದು ತಾಯಿ ಲಕ್ಷ್ಮೀ ಬಾಂಡ್ ಯೋಜನೆ?

ತಾಯಿ ಲಕ್ಷ್ಮೀ ಬಾಂಡ್ (ಹೆರಿಗೆ ಸಹಾಯಧನ) ಯೋಜನೆ ಎನ್ನುವುದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಮಹಿಳಾ ಕಾರ್ಮಿಕರಿಗೆ ನೀಡಲಾಗುವ ಒಂದು ಪ್ರಮುಖ ಸಾಮಾಜಿಕ ಭದ್ರತಾ ಯೋಜನೆಯಾಗಿದೆ. ಈ ಯೋಜನೆಯಡಿ, ಮಹಿಳಾ ಕಾರ್ಮಿಕರ ಮೊದಲ ಎರಡು ಹೆರಿಗೆಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು, ಹೆಣ್ಣು ಮಗುವಿನ ಜನನಕ್ಕೆ 30,000 ರೂ. ಮತ್ತು ಗಂಡು ಮಗುವಿನ ಜನನಕ್ಕೆ 20,000 ರೂ. ವರೆಗೆ ಸಹಾಯಧನವನ್ನು ಬಾಂಡ್ ಅಥವಾ ನೇರ ನಗದು ವರ್ಗಾವಣೆ ಮೂಲಕ ಒದಗಿಸಲಾಗುತ್ತದೆ (ಇತ್ತೀಚಿನ ನಿಯಮ 43 ರಂತೆ ಇದು ಒಟ್ಟಾರೆ 50,000 ವರೆಗೂ ಇರಬಹುದು).

ಯೋಜನೆಯ ಪ್ರಮುಖ ಸೌಲಭ್ಯಗಳು

  • ಒಂದು ವೇಳೆ ಹೆಣ್ಣು ಮಗು ಜನಿಸಿದರೆ 30,000 ರೂ. ವರೆಗೆ ಸಹಾಯಧನವನ್ನು ನೀಡಲಾಗುತ್ತದೆ.
  • ಒಂದು ವೇಳೆ ಗಂಡು ಮಗು ಜನಿಸಿದರೆ ರೂ. 20,000 ವರೆಗೆ ಸಹಾಯಧನವನ್ನು ನೀಡಲಾಗುತ್ತದೆ.
  • ಈ ಧನಸಹಾಯವನ್ನು ಸರ್ಕಾರವು ಈ ಹಿಂದೆ ಬಾಂಡ್ ರೂಪದಲ್ಲಿ ನೀಡುತ್ತಿತ್ತು, ಆದರೆ ಈಗ ನಗದು ರೂಪದಲ್ಲಿಯೂ ಪಡೆಯುವ ಅವಕಾಶವಿದೆ.
  • ಸರ್ಕಾರದ ಇತ್ತೀಚಿನ ನಿಯಮ 43ರ ಆದೇಶದಂತೆ, ಅರ್ಹ ಮಹಿಳಾ ಕಾರ್ಮಿಕರಿಗೆ ಗರಿಷ್ಠ 50,000 ರೂ. ವರೆಗೆ ಸಹಾಯಧನವನ್ನು ಮಂಜೂರು ಮಾಡಬಹುದಾಗಿದೆ.
  • ಈ ಮೊತ್ತವು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಡಿ.ಬಿ.ಟಿ (DBT) ಮೂಲಕ ಜಮಾ ಆಗುತ್ತದೆ.

    ಸಹಾಯಧನ ಪಡೆಯಲು ನಿಯಮಗಳೇನು?

    • ನೋಂದಾಯಿತ ಮಹಿಳಾ ಕಾರ್ಮಿಕರು ಮೊದಲ ಎರಡು ಜೀವಂತ ಮಕ್ಕಳಿಗೆ ಮಾತ್ರ ಸಹಾಯ ಧನವನ್ನು ಪಡೆಯಲು ಅರ್ಹರಾಗಿರುತ್ತಾರೆ (ಎರಡನೇ ಹಕ್ಕು ಸಾಧನೆ ಸಹಾಯ ಧನ ಅರ್ಜಿಯು ಎರಡನೇ ಮಗುವಿನ ಹೆರಿಗೆ ಎಂದು ಹೇಳುವ ಅಫೀಡೆವಿಟ್ ಅನ್ನು ಒಳಗೊಂಡಿರಬೇಕು).
    • ಒಂದು ವೇಳೆ ಈಗಾಗಲೇ ನೋಂದಾಯಿತ ಮಹಿಳಾ ಕಾರ್ಮಿಕರಿಗೆ ಎರಡು ಮಕ್ಕಳಿದ್ದರೆ, ಅವಳು ಈ ಸೌಲಭ್ಯವನ್ನು ಪಡೆಯಲು ಅರ್ಹರಾಗುವುದಿಲ್ಲ.
    • ಜನನ ಮತ್ತು ಮರಣದ ನೋಂದಾಣಾ ಅಧಿಕಾರಿಯಿಂದ ಜನನದ ಪ್ರಮಾಣ ಪತ್ರವನ್ನು ಪಡೆಯಬೇಕು. ಅಥವಾ ಸರ್ಕಾರಿ ಆಸ್ಪತ್ರೆ, ಕರ್ನಾಟಕ ರಾಜ್ಯದಲ್ಲಿ ನೋಂದಾಯಿತ ಅಂಗೀಕೃತ ಆಸ್ಪತ್ರೆಗಳಲ್ಲಿ ದಾಖಲಾಗಿ ಆ ಸಂಸ್ಥೆಯ ಮುಖ್ಯಸ್ಥರಿಂದ ಸಹಿ ಮಾಡಿದ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

    ಅರ್ಹತಾ ಮಾನದಂಡಗಳು

    ಅರ್ಜಿದಾರರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತರಾಗಿರಬೇಕು ಮತ್ತು ಚಾಲ್ತಿಯಲ್ಲಿರುವ ಲೇಬರ್ ಕಾರ್ಡ್ ಹೊಂದಿರಬೇಕು.
  • ಮಹಿಳಾ ಕಾರ್ಮಿಕರಿಗೆ ಕನಿಷ್ಠ 18 ವರ್ಷ ತುಂಬಿರಬೇಕು.
  • ನೋಂದಣಿ ಮಾಡುವ ಮೊದಲು ಅಥವಾ ಸಹಾಯಧನಕ್ಕೆ ಅರ್ಜಿ ಸಲ್ಲಿಸುವ ಹಿಂದಿನ 12 ತಿಂಗಳಲ್ಲಿ ಕನಿಷ್ಠ 90 ದಿನಗಳ ಕಾಲ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡಿರಬೇಕು.
  • ಈ ಸೌಲಭ್ಯವು ಮೊದಲ ಎರಡು ಹೆರಿಗೆಗಳಿಗೆ ಮಾತ್ರ ಸೀಮಿತವಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಅರ್ಹ ಫಲಾನುಭವಿಗಳು ಈ ಯೋಜನೆಗೆ ಆನ್‌ಲೈನ್ ಅಥವಾ ಆಫ್‌ಲೈನ್ ಈ ಎರಡು ವಿಧಾನಗಳ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.
  • ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಚ್ಛಿಸುವವರು ಕರ್ನಾಟಕ ಸರ್ಕಾರದ ಅಧಿಕೃತ ಸೇವಾ ಸಿಂಧು ಪೋರ್ಟಲ್‌ sevasindhu.karnataka.gov.in/ ಗೆ ಭೇಟಿ ನೀಡಬೇಕು.
  • ಪೋರ್ಟಲ್‌ನಲ್ಲಿ "Maternity Assistance (ತಾಯಿ ಲಕ್ಷ್ಮೀ ಬಾಂಡ್‌ )" ಅಥವಾ "ಹೆರಿಗೆ ಸಹಾಯಧನ" ಎಂಬ ಸೇವೆಯನ್ನು ಹುಡುಕಿ ಆಯ್ಕೆ ಮಾಡಿಕೊಳ್ಳಬೇಕು.
  • ಅರ್ಜಿಯ ಜೊತೆಗೆ ಕೇಳಲಾದ ಅಗತ್ಯ ದಾಖಲೆಗಳನ್ನು ಸ್ಪಷ್ಟವಾಗಿ ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡುವ ಮೂಲಕ ಅರ್ಜಿಯನ್ನು ಪೂರ್ಣಗೊಳಿಸಬಹುದು.
  • ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಹತ್ತಿರದ ಅಥವಾ ಸ್ಥಳೀಯ ಕಾರ್ಮಿಕ ಇಲಾಖೆಯ ಕಚೇರಿಗೆ (ಕಾರ್ಮಿಕ ಭವನ) ಭೇಟಿ ನೀಡಿ ನಿಗದಿತ ನಮೂನೆಯ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.
  • ಈ ಯೋಜನೆಯ ಸೌಲಭ್ಯ ಪಡೆಯಲು ಮಗು ಜನಿಸಿದ 6 ತಿಂಗಳ ಒಳಗಾಗಿ ಅರ್ಜಿಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ, ವಿಳಂಬವಾದರೆ ಅರ್ಜಿ ತಿರಸ್ಕೃತಗೊಳ್ಳುವ ಸಾಧ್ಯತೆ ಇರುತ್ತದೆ.
  • ಅಗತ್ಯವಿರುವ ದಾಖಲೆಗಳು

    • ಮಂಡಳಿ ನೀಡಿರುವ ಅಸಲಿ ಗುರುತಿನ ಚೀಟಿ
    • ಮಗುವಿನ ಜನನ ಪ್ರಮಾಣ ಪತ್ರ
    • ತಾಯಿಯ ಆಧಾರ್ ಕಾರ್ಡ್ (ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು).
    • ಬ್ಯಾಂಕ್ ಪಾಸ್‌ಬುಕ್ ಪ್ರತಿ
    • ತಾಯಿ ಕಾರ್ಡ್‌
    • ಕೆಲಸದ ದೃಢೀಕರಣ ಪತ್ರ (ಉದ್ಯೋಗ ದೃಢೀಕರಣ).
    • ಆಸ್ಪತ್ರೆಯ ಡಿಸ್ಚಾರ್ಜ್ ಸಾರಾಂಶ
    • ಇದು ಎರಡನೇ ಮಗುವಾಗಿದ್ದಲ್ಲಿ, ಅಫಿಡವಿಟ್ ಸಲ್ಲಿಸುವುದು ಕಡ್ಡಾಯ.


    ಇತರೆ ಸಂಬಂಧಿತ ಯೋಜನೆಗಳು

    • ತಾಯಿ ಮಗು ಸಹಾಯ ಹಸ್ತ ಯೋಜನೆಯಡಿ, ಮೂರು ವರ್ಷದೊಳಗಿನ ಮಕ್ಕಳ ಪೌಷ್ಟಿಕಾಂಶ ಮತ್ತು ಆರೋಗ್ಯದ ಆರೈಕೆಗಾಗಿ ಪ್ರತಿ ತಿಂಗಳು 500 ರೂ. ಸಹಾಯಧನವನ್ನು ನೀಡಲಾಗುತ್ತದೆ.
    • ಈ ಯೋಜನೆಯ ಮೂಲಕ ಒಂದು ಮಗುವಿಗೆ ವರ್ಷಕ್ಕೆ ಒಟ್ಟು 6,000 ರೂ.ವರೆಗೆ ಆರ್ಥಿಕ ನೆರವು ಲಭ್ಯವಾಗುತ್ತದೆ.
    • ಶೈಕ್ಷಣಿಕ ಧನಸಹಾಯ (ಕಲಿಕೆ ಭಾಗ್ಯ) ಯೋಜನೆಯಡಿ, ಕಾರ್ಮಿಕರ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ವಾರ್ಷಿಕ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
    • ವಿದ್ಯಾರ್ಥಿ ಓದುತ್ತಿರುವ ತರಗತಿ ಅಥವಾ ಕೋರ್ಸ್‌ಗೆ ಅನುಗುಣವಾಗಿ ವರ್ಷಕ್ಕೆ 2,000 ರೂ.ದಿಂದ 30,000 ರೂ.ಕ್ಕೂ ಹೆಚ್ಚು ಹಣವನ್ನು ಶಿಕ್ಷಣಕ್ಕಾಗಿ ಪಡೆಯಬಹುದು.
    • ಈ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಅಥವಾ ಯಾವುದೇ ಸಮಸ್ಯೆಗಳಿದ್ದಲ್ಲಿ ನಿಮ್ಮ ವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸಬಹುದು.
]]>
Fri, 23 Jan 2026 18:43:45 +0530 shivuagrico
Atal Pension yojane&ತಿಂಗಳಿಗೆ 210 ರೂಪಾಯಿ ಕಟ್ಟಿ 5,000 ರೂ. ಪಿಂಚಣಿ ಪಡೆಯಿರಿ https://krushirushi.in/Atal-Pension-yojane-2026 https://krushirushi.in/Atal-Pension-yojane-2026 Atal Pension yojane-ತಿಂಗಳಿಗೆ 210 ರೂಪಾಯಿ ಕಟ್ಟಿ 5,000 ರೂ. ಪಿಂಚಣಿ ಪಡೆಯಿರಿ

ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಜನಸಾಮಾನ್ಯರಿಗೆ ವೃದ್ಧಾಪ್ಯದ ಸಮಯದಲ್ಲಿ ಪ್ರತಿ ತಿಂಗಳು ನಿಗದಿತ ಹಣವನ್ನು ನೀಡುವ ಮಹತ್ವಕಾಂಕ್ಷಿ ಅಟಲ್‌ ಪಿಂಚಣಿ ಯೋಜನೆಯನ್ನು ಕೇಂದ್ರ ಸರ್ಕಾರ ಮುಂದಿನ 5 ವರ್ಷಗಳ ಅವಧಿಗೆ ವಿಸ್ತರಿಸಿದೆ. ಕೇಂದ್ರ ಸಚಿವ ಸಂಪುಟವು ಇತ್ತೀಚೆಗೆ ಅಟಲ್ ಪೆನ್ಷನ್ ಯೋಜನೆ ಅನ್ನು 2030-31ರವರೆಗೆ ವಿಸ್ತರಿಸಲು ಅನುಮೋದನೆ ನೀಡಿದೆ. ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಯ ಕುರಿತ ಇಣುಕುನೋಟ ಇಲ್ಲಿದೆ.

ಏನಿದು ಅಟಲ್‌ ಪಿಂಚಣಿ ಯೋಜನೆ?
ಅಟಲ್ ಪಿಂಚಣಿ ಯೋಜನೆಯು ಭಾರತ ಸರ್ಕಾರವು ಪ್ರಾರಂಭಿಸಿದ ಸಾಮಾಜಿಕ ಭದ್ರತಾ ಯೋಜನೆಯಾಗಿದೆ. ಇದು ಭಾರತದ ಎಲ್ಲಾ ನಾಗರಿಕರಿಗೆ 60 ವರ್ಷದ ನಂತರ ಸ್ಥಿರವಾದ ಆದಾಯವನ್ನು ಒದಗಿಸುತ್ತದೆ. ಬೇರೆ ರೀತಿಯಲ್ಲಿ ಹೇಳುವುದಾದರೆ, ಇದು ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಕೆಲಸಗಾರರು, ವಿತರಣಾ ಕಾರ್ಮಿಕರು, ತೋಟಗಾರರು ಮುಂತಾದವರ ಮೇಲೆ ಕೇಂದ್ರೀಕರಿಸಿದ ಪಿಂಚಣಿ ಯೋಜನೆಯಾಗಿದೆ. ಅಟಲ್‌ ಪಿಂಚಣಿ ಯೋಜನೆ ಅಡಿಯಲ್ಲಿ, ಚಂದಾದಾರರ ಕೊಡುಗೆಗಳನ್ನು ಅವಲಂಬಿಸಿ 60 ವರ್ಷ ವಯಸ್ಸಿನಲ್ಲಿ ಮಾಸಿಕ ರೂ. 1,000/- ಅಥವಾ 2,000/- ಅಥವಾ 3,000/- ಅಥವಾ 4,000 ಅಥವಾ 5,000/- ಗಳ ಖಾತರಿಪಡಿಸಿದ ಕನಿಷ್ಠ ಪಿಂಚಣಿಯನ್ನು ನೀಡಲಾಗುತ್ತದೆ. ಭಾರತದ ಯಾವುದೇ ನಾಗರಿಕರು ಅಟಲ್‌ ಪಿಂಚಣಿ ಯೋಜನೆ ಯೋಜನೆಗೆ ಸೇರಬಹುದು.

ಅಟಲ್‌ ಪಿಂಚಣಿ ಯೋಜನೆಯ ಪ್ರಯೋಜನಗಳು
ಅಟಲ್ ಪಿಂಚಣಿ ಯೋಜನೆಯಡಿ ಕನಿಷ್ಠ ಪಿಂಚಣಿಯ ಪ್ರಯೋಜನವನ್ನು ಸರ್ಕಾರವು ಖಾತರಿಪಡಿಸುತ್ತದೆ, ಅಂದರೆ ಪಿಂಚಣಿ ಕೊಡುಗೆಗಳ ಮೇಲಿನ ನಿಜವಾದ ಆದಾಯವು ಕನಿಷ್ಠ ಖಾತರಿಪಡಿಸಿದ ಪಿಂಚಣಿಗಾಗಿ ಊಹಿಸಲಾದ ಆದಾಯಕ್ಕಿಂತ ಕಡಿಮೆಯಿದ್ದರೆ, ಅಂತಹ ಕೊರತೆಯನ್ನು ಸರ್ಕಾರವು ಭರಿಸುತ್ತದೆ.
ಅಟಲ್ ಪಿಂಚಣಿ ಯೋಜನೆಯಡಿ, ತಿಂಗಳಿಗೆ ಕೇವಲ 210 ರೂಪಾಯಿಗಳನ್ನು ಪಾವತಿಸುವ ಮೂಲಕ ತಿಂಗಳಿಗೆ 5000 ರೂಪಾಯಿ ಪಿಂಚಣಿ ಪಡೆಯಬಹುದು.
ಈ ಯೋಜನೆಯಲ್ಲಿ ಖಾತೆಯನ್ನು ತೆರೆಯುವ ಮೂಲಕ, ನೀವು 60 ವರ್ಷದ ನಂತರ ಪ್ರತಿ ತಿಂಗಳು 1000 ರಿಂದ 5000 ರೂಪಾಯಿಗಳ ಪಿಂಚಣಿಯನ್ನು ಪಡೆಯಬಹುದು.

ಅಟಲ್‌ ಪಿಂಚಣಿ ಯೋಜನೆ ಬಗ್ಗೆ ತಿಳಿದುಕೊಳ್ಳಬೇಕಾದ ಪ್ರಮುಖ ಸಂಗತಿಗಳು
  • ನೀವು ನಿಯತಕಾಲಿಕವಾಗಿ ಕೊಡುಗೆಗಳನ್ನು ನೀಡುತ್ತಿರುವುದರಿಂದ, ಮೊತ್ತವನ್ನು ನಿಮ್ಮ ಖಾತೆಯಿಂದ ಸ್ವಯಂಚಾಲಿತವಾಗಿ ಡೆಬಿಟ್ ಮಾಡಲಾಗುತ್ತದೆ. ಪ್ರತಿ ಡೆಬಿಟ್‌ಗೂ ಮೊದಲು ನಿಮ್ಮ ಖಾತೆಯಲ್ಲಿ ಸಾಕಷ್ಟು ಬ್ಯಾಲೆನ್ಸ್ ಇದೆ ಎಂದು ನೀವು ಖಚಿತಪಡಿಸಿಕೊಳ್ಳಬೇಕು.
  • ನಿಮ್ಮ ಇಚ್ಛೆಯಂತೆ ನೀವು ನಿಮ್ಮ ಪ್ರೀಮಿಯಂ ಅನ್ನು ಹೆಚ್ಚಿಸಬಹುದು. ನೀವು ನಿಮ್ಮ ಬ್ಯಾಂಕ್‌ಗೆ ಭೇಟಿ ನೀಡಿ ನಿಮ್ಮ ವ್ಯವಸ್ಥಾಪಕರೊಂದಿಗೆ ಮಾತನಾಡಿ ಅಗತ್ಯ ಬದಲಾವಣೆಗಳನ್ನು ಮಾಡಬೇಕು.
  • ನಿಮ್ಮ ಪಾವತಿಗಳನ್ನು ತಪ್ಪಿಸಿದರೆ, ದಂಡ ವಿಧಿಸಲಾಗುತ್ತದೆ. ಪ್ರತಿ ರೂ. 100 ಅಥವಾ ಅದರ ಭಾಗದ ಕೊಡುಗೆಗೆ ತಿಂಗಳಿಗೆ 1 ರೂ. ದಂಡ ವಿಧಿಸಲಾಗುತ್ತದೆ.
  • ನೀವು 6 ತಿಂಗಳವರೆಗೆ ನಿಮ್ಮ ಪಾವತಿಯನ್ನು ತಪ್ಪಿಸಿದರೆ, ನಿಮ್ಮ ಖಾತೆಯನ್ನು ಸ್ಥಗಿತಗೊಳಿಸಲಾಗುತ್ತದೆ ಮತ್ತು ತಪ್ಪಿಸುವಿಕೆ 12 ತಿಂಗಳವರೆಗೆ ಮುಂದುವರಿದರೆ, ಖಾತೆಯನ್ನು ನಿಷ್ಕ್ರಿಯಗೊಳಿಸಲಾಗುತ್ತದೆ ಮತ್ತು ನೀವು 24 ತಿಂಗಳವರೆಗೆ ಪಾವತಿಗಳನ್ನು ಮಾಡಲು ವಿಫಲವಾದರೆ ನಿಮ್ಮ ಖಾತೆಯನ್ನು ಮುಚ್ಚಲಾಗುತ್ತದೆ ಮತ್ತು ಉಳಿದ ಮೊತ್ತವನ್ನು ಚಂದಾದಾರರಿಗೆ ಪಾವತಿಸಲಾಗುತ್ತದೆ.
  • ಅವಧಿಗೆ ಮುಂಚಿತವಾಗಿ ಹಿಂಪಡೆಯುವಿಕೆಯನ್ನು ಪರಿಗಣಿಸಲಾಗುವುದಿಲ್ಲ. ಸಾವು ಅಥವಾ ಮಾರಕ ಕಾಯಿಲೆಯಂತಹ ಸಂದರ್ಭಗಳಲ್ಲಿ ಮಾತ್ರ, ಚಂದಾದಾರರು ಅಥವಾ ಅವರ/ಅವಳ ನಾಮಿನಿ ಸಂಪೂರ್ಣ ಮೊತ್ತವನ್ನು ಮರಳಿ ಪಡೆಯುತ್ತಾರೆ.
  • ನೀವು 60 ವರ್ಷಕ್ಕಿಂತ ಮೊದಲು ಬೇರೆ ಯಾವುದೇ ಕಾರಣಕ್ಕಾಗಿ ಯೋಜನೆಯನ್ನು ಮುಚ್ಚಿದರೆ, ನಿಮ್ಮ ಕೊಡುಗೆ ಮತ್ತು ಗಳಿಸಿದ ಬಡ್ಡಿಯನ್ನು ಮಾತ್ರ ಹಿಂತಿರುಗಿಸಲಾಗುತ್ತದೆ. ನೀವು ಸರ್ಕಾರದ ಸಹ-ಕೊಡುಗೆ ಅಥವಾ ಆ ಮೊತ್ತದ ಮೇಲೆ ಗಳಿಸಿದ ಬಡ್ಡಿಯನ್ನು ಪಡೆಯಲು ಅರ್ಹರಾಗಿರುವುದಿಲ್ಲ.

ವಯಸ್ಸಿನ ನಿರ್ಬಂಧಗಳು:
18 ವರ್ಷಕ್ಕಿಂತ ಮೇಲ್ಪಟ್ಟ ಮತ್ತು 40 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳು ಅಟಲ್ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ನಿರ್ಧರಿಸಬಹುದು. ಆದ್ದರಿಂದ, ಕಾಲೇಜು ವಿದ್ಯಾರ್ಥಿಗಳು ತಮ್ಮ ವೃದ್ಧಾಪ್ಯಕ್ಕಾಗಿ ನಿಧಿಯನ್ನು ರಚಿಸಲು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಈ ಯೋಜನೆಗೆ ಪ್ರವೇಶ ಪಡೆಯಲು ಗರಿಷ್ಠ ಮಿತಿಯನ್ನು 40 ವರ್ಷಗಳಾಗಿ ನಿಗದಿಪಡಿಸಲಾಗಿದೆ, ಏಕೆಂದರೆ ಈ ಯೋಜನೆಗೆ ಕೊಡುಗೆಗಳನ್ನು ಕನಿಷ್ಠ 20 ವರ್ಷಗಳವರೆಗೆ ನೀಡಬೇಕು.

ಅಟಲ್ ಪಿಂಚಣಿ ಯೋಜನೆಯ ಅರ್ಹತೆಗಳು ಏನು?
ಅಟಲ್ ಪಿಂಚಣಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು, ನೀವು ಈ ಕೆಳಗಿನ ಅವಶ್ಯಕತೆಗಳನ್ನು ಪೂರೈಸಬೇಕು:
  • ಭಾರತದ ನಾಗರಿಕರಾಗಿರಬೇಕು.
  • 18-40 ವರ್ಷ ವಯಸ್ಸಿನವರಾಗಿರಬೇಕು
  • ಕನಿಷ್ಠ 20 ವರ್ಷಗಳವರೆಗೆ ಕೊಡುಗೆಗಳನ್ನು ನೀಡಬೇಕು.
  • ನಿಮ್ಮ ಆಧಾರ್‌ನೊಂದಿಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು
  • ಮಾನ್ಯವಾದ ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು

ಅಟಲ್‌ ಪಿಂಚಣಿ ಯೋಜನೆ ಖಾತೆಯನ್ನು ತೆರೆಯುವ ವಿಧಾನ
  • ವ್ಯಕ್ತಿಯ ಉಳಿತಾಯ ಬ್ಯಾಂಕ್ ಖಾತೆ ಇರುವ ಬ್ಯಾಂಕ್ ಶಾಖೆ/ಅಂಚೆ ಕಚೇರಿಯನ್ನು ಸಂಪರ್ಕಿಸಿ ಅಥವಾ ಚಂದಾದಾರರು ಉಳಿತಾಯ ಖಾತೆಯನ್ನು ಹೊಂದಿಲ್ಲದಿದ್ದರೆ ಅದನ್ನು ತೆರೆಯಿರಿ.
  • ಬ್ಯಾಂಕ್ ಖಾತೆ ಸಂಖ್ಯೆ/ಅಂಚೆ ಕಚೇರಿ ಉಳಿತಾಯ ಬ್ಯಾಂಕ್ ಖಾತೆ ಸಂಖ್ಯೆಯನ್ನು ಒದಗಿಸಿ ಮತ್ತು ಬ್ಯಾಂಕ್ ಸಿಬ್ಬಂದಿಯ ಸಹಾಯದಿಂದ, ಅಟಲ್‌ ಪಿಂಚಣಿ ಯೋಜನೆ ನೋಂದಣಿ ಅರ್ಜಿ ನಮೂನೆಯನ್ನು ಅನ್ನು ಭರ್ತಿ ಮಾಡಿ.
  • ಆಧಾರ್/ಮೊಬೈಲ್ ಸಂಖ್ಯೆಯನ್ನು ಒದಗಿಸಿ. ಇದು ಕಡ್ಡಾಯವಲ್ಲ, ಆದರೆ ಕೊಡುಗೆಗೆ ಸಂಬಂಧಿಸಿದಂತೆ ಸಂವಹನವನ್ನು ಸುಲಭಗೊಳಿಸಲು ಒದಗಿಸಬಹುದು.
  • ಮಾಸಿಕ/ತ್ರೈಮಾಸಿಕ/ಅರ್ಧವಾರ್ಷಿಕ ಕೊಡುಗೆಯನ್ನು ವರ್ಗಾಯಿಸಲು ಉಳಿತಾಯ ಬ್ಯಾಂಕ್ ಖಾತೆ/ಅಂಚೆ ಕಚೇರಿ ಉಳಿತಾಯ ಬ್ಯಾಂಕ್ ಖಾತೆಯಲ್ಲಿ ಅಗತ್ಯವಿರುವ ಬಾಕಿಯನ್ನು ಇಟ್ಟುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಿ.

ಅಟಲ್‌ ಪಿಂಚಣಿ ಯೋಜನೆಯಿಂದ ಹಣ ಹಿಂತೆಗೆದುಕೊಳ್ಳುವುದು ಹೇಗೆ?
60 ವರ್ಷಕ್ಕಿಂತ ಮೊದಲು: ನಿಗದಿತ ಅವಧಿಗಿಂತ ಮೊದಲು ಅಟಲ್‌ ಪಿಂಚಣಿ ಯೋಜನೆ ಯೋಜನೆಯಿಂದ ಹಣ ಹಿಂತೆಗೆದುಕೊಳ್ಳಲು ಅನುಮತಿ ಇಲ್ಲ, ಆದರೆ ಫಲಾನುಭವಿಯ ಸಾವು ಅಥವಾ ಮಾರಣಾಂತಿಕ ಕಾಯಿಲೆಯಂತಹ ಅಸಾಧಾರಣ ಸಂದರ್ಭಗಳಲ್ಲಿ ನಿರ್ಗಮನವನ್ನು ಅನುಮತಿಸಬಹುದು.

60 ವರ್ಷಗಳನ್ನು ತಲುಪುವುದು: ಫಲಾನುಭವಿಗಳು 60 ವರ್ಷ ವಯಸ್ಸನ್ನು ತಲುಪಿದ್ದರೆ, ಅವರು ಸಂಪೂರ್ಣ ಕಾರ್ಪಸ್ ಮೊತ್ತವನ್ನು ವರ್ಷಾಶನ ಮಾಡಲು ಅರ್ಹರಾಗಿರುತ್ತಾರೆ, ಅಂದರೆ ಆಯಾ ಬ್ಯಾಂಕಿನಲ್ಲಿ ಯೋಜನೆಯನ್ನು ಮುಕ್ತಾಯಗೊಳಿಸಿದ ನಂತರ ಮಾಸಿಕ ಪಿಂಚಣಿಗಳನ್ನು ಪಡೆಯುತ್ತಾರೆ.

ಚಂದಾದಾರರ ಮರಣ: ಸಂಗಾತಿಗೆ ಪಿಂಚಣಿ ಲಭ್ಯವಿರುತ್ತದೆ ಮತ್ತು ಸಂಗಾತಿಯ ಮರಣದ ನಂತರ, ಪಿಂಚಣಿ ನಿಧಿಯನ್ನು ನಾಮನಿರ್ದೇಶಿತರಿಗೆ ಹಿಂತಿರುಗಿಸಲಾಗುತ್ತದೆ

ಪಿಂಚಣಿ ಲೆಕ್ಕಾಚಾರ ಹೇಗೆ?
ಉದಾಹರಣೆ-1: 18 ವರ್ಷದಲ್ಲಿ ರೂ. 5,000 ಪಿಂಚಣಿಗೆ ಸೇರುವುದು: 42 ವರ್ಷಗಳ ಕಾಲ ತಿಂಗಳಿಗೆ ರೂ. 210 ಪಾವತಿಸಿ (ಒಟ್ಟು 1.06 ಲಕ್ಷ ರೂ. ಕೊಡುಗೆ), 60 ವರ್ಷದಿಂದ ತಿಂಗಳಿಗೆ ರೂ. 5,000 ಪಿಂಚಣಿ ಪಡೆಯಿರಿ, ಮತ್ತು ಗೊತ್ತುಪಡಿಸಿದವರಿಗೆ ರೂ. 8.5 ಲಕ್ಷ ಮೊತ್ತ ಮರಳಿ ಬರುತ್ತದೆ (ಸಂಗಾತಿ ಮತ್ತು ಗ್ರಾಹಕ ಇಬ್ಬರೂ ಮರಣ ಹೊಂದಿದ ನಂತರ).

ಉದಾಹರಣೆ-2: 40 ವರ್ಷದಲ್ಲಿ ರೂ. 1,000 ಪಿಂಚಣಿಗೆ ಸೇರುವುದು: 20 ವರ್ಷಗಳ ಕಾಲ ತಿಂಗಳಿಗೆ ರೂ. 291 ಪಾವತಿಸಿ (ಒಟ್ಟು 69,840 ರೂ. ಕೊಡುಗೆ), 60 ವರ್ಷದಿಂದ ತಿಂಗಳಿಗೆ ರೂ. 1,000 ಪಿಂಚಣಿ ಪಡೆಯಿರಿ, ಮತ್ತು ಗೊತ್ತುಪಡಿಸಿದವರಿಗೆ ರೂ. 1.7 ಲಕ್ಷ ಮೊತ್ತ ಮರಳಿ ಬರುತ್ತದೆ.

ಉದಾಹರಣೆಗೆ ಈ ಕೋಷ್ಟಕವನ್ನು ಗಮನಿಸಿ:

ಸೇರುವ ವಯಸ್ಸು (ವರ್ಷಗಳು) ರೂ. 1,000 ಪಿಂಚಣಿ ರೂ. 2,000 ಪಿಂಚಣಿ ರೂ. 3,000 ಪಿಂಚಣಿ ರೂ. 4,000 ಪಿಂಚಣಿ ರೂ. 5,000 ಪಿಂಚಣಿ
18 42 ರೂ. 84 ರೂ. 126 ರೂ. 168 ರೂ. 210 ರೂ.
20 50 ರೂ. 100 ರೂ. 150 ರೂ. 198 ರೂ. 248 ರೂ.
25 76 ರೂ. 151 ರೂ. 226 ರೂ. 301 ರೂ. 376 ರೂ.
30 116 ರೂ. 231 ರೂ. 347 ರೂ. 462 ರೂ. 577 ರೂ.
35 181 ರೂ. 362 ರೂ. 543 ರೂ. 722 ರೂ. 902 ರೂ.
40 291 ರೂ. 582 ರೂ. 873 ರೂ. 1,164 ರೂ. 1,454 ರೂ.


ಕಂತು ಪಾವತಿ ತಪ್ಪಿಸುವಿಕೆಯ ಮೇಲಿನ ದಂಡ
ನಿಮ್ಮ ಪಾವತಿಗಳನ್ನು ತಪ್ಪಿಸಿದರೆ ನಿಮ್ಮ ಬ್ಯಾಂಕ್ ಈ ಕೆಳಗಿನಂತೆ ಕೆಲವು ಹೆಚ್ಚುವರಿ ಮೊತ್ತಗಳನ್ನು ಸಂಗ್ರಹಿಸುತ್ತದೆ:

  • 100 ರೂ. ವರೆಗಿನ ಮಾಸಿಕ ಕೊಡುಗೆಗಳಿಗೆ 1 ರೂ
  • 101 ರೂ. ವರೆಗಿನ ಒಳಗೆ ಮಾಸಿಕ ಕೊಡುಗೆಗಳಿಗೆ 2.5 ರೂ..
  • 501 ದಿಂದ 1000 ರೂ. ವರೆಗಿನ ಮಾಸಿಕ ಕೊಡುಗೆಗಳಿಗೆ 5 ರೂ.
  • 1001 ರೂ. ಮತ್ತು ಅದಕ್ಕಿಂತ ಹೆಚ್ಚಿನ ಮಾಸಿಕ ಕೊಡುಗೆಗಳಿಗೆ 10 ರೂ.

ಅಟಲ್ ಪಿಂಚಣಿ ಯೋಜನೆಗೆ 7.65 ಕೋಟಿ ಚಂದಾದಾರರುಅಸಂಘಟಿತ ವಲಯಕ್ಕೆ ಭಾರತದ ಪ್ರಮುಖ ನಿವೃತ್ತಿ ಉಳಿತಾಯ ಯೋಜನೆಯಾದ ಅಟಲ್ ಪಿಂಚಣಿ ಯೋಜನೆ ಏಪ್ರಿಲ್ 2025 ರ ವೇಳೆಗೆ 7.65 ಕೋಟಿಗೂ ಹೆಚ್ಚು ಚಂದಾದಾರರನ್ನು ಮತ್ತು ಒಟ್ಟು 45,974.67 ಕೋಟಿ ರೂ.ಗಳ ನಿಧಿಯೊಂದಿಗೆ ಪ್ರಮುಖ ಮೈಲಿಗಲ್ಲನ್ನು ದಾಟಿದೆ. ಈ ಯೋಜನೆಯು ಮಹಿಳೆಯರ ಭಾಗವಹಿಸುವಿಕೆಯಲ್ಲಿ ಸ್ಥಿರವಾದ ಹೆಚ್ಚಳವನ್ನು ಕಂಡಿದೆ, ಈಗ ಒಟ್ಟು ಚಂದಾದಾರರ ಸಂಖ್ಯೆಯಲ್ಲಿ ಮಹಿಳೆಯರೇ ಸರಿಸುಮಾರು 48% ರಷ್ಟಿದ್ದಾರೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.

ಇತರ ಪ್ರಮುಖ ಸಂಗತಿಗಳು

  • ಅಟಲ್‌ ಪಿಂಚಣಿ ಯೋಜನೆ ಖಾತೆಯಲ್ಲಿ ನಾಮಿನಿ ವಿವರಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಚಂದಾದಾರರು ವಿವಾಹಿತರಾಗಿದ್ದರೆ, ಸಂಗಾತಿಯು ಕಡ್ಡಾಯ ನಾಮಿನಿಯಾಗಿರುತ್ತಾರೆ. ಅವಿವಾಹಿತ ಚಂದಾದಾರರು ಬೇರೆ ಯಾವುದೇ ವ್ಯಕ್ತಿಯನ್ನು ನಾಮಿನಿಯಾಗಿ ನಾಮನಿರ್ದೇಶನ ಮಾಡಬಹುದು ಮತ್ತು ಮದುವೆಯ ನಂತರ ಅವರು ಸಂಗಾತಿಯ ವಿವರಗಳನ್ನು ಒದಗಿಸಬೇಕು. ಸಂಗಾತಿ ಮತ್ತು ನಾಮಿನಿಯರ ಆಧಾರ್ ವಿವರಗಳನ್ನು ಒದಗಿಸಬಹುದು.
  • ಒಬ್ಬ ಚಂದಾದಾರನು ಒಂದು ಅಟಲ್‌ ಪಿಂಚಣಿ ಯೋಜನೆ ಖಾತೆಯನ್ನು ಮಾತ್ರ ತೆರೆಯಬಹುದು ಮತ್ತು ಅದು ವಿಶಿಷ್ಟವಾಗಿದೆ. ಬಹು ಖಾತೆಗಳನ್ನು ಅನುಮತಿಸಲಾಗುವುದಿಲ್ಲ.
  • ಚಂದಾದಾರರು ಸಂಚಯ ಹಂತದಲ್ಲಿ ವರ್ಷಕ್ಕೊಮ್ಮೆ ಪಿಂಚಣಿ ಮೊತ್ತವನ್ನು ಕಡಿಮೆ ಮಾಡಲು ಅಥವಾ ಹೆಚ್ಚಿಸಲು ಆಯ್ಕೆ ಮಾಡಬಹುದು.
  • PRAN ಸಕ್ರಿಯಗೊಳಿಸುವಿಕೆ, ಖಾತೆಯಲ್ಲಿನ ಬಾಕಿ, ಕೊಡುಗೆ ಕ್ರೆಡಿಟ್‌ಗಳು ಇತ್ಯಾದಿಗಳ ಕುರಿತು ಚಂದಾದಾರರಿಗೆ ನಿಯತಕಾಲಿಕ ಮಾಹಿತಿಯನ್ನು SMS ಎಚ್ಚರಿಕೆಗಳ ಮೂಲಕ ತಿಳಿಸಲಾಗುತ್ತದೆ. ಚಂದಾದಾರರು ವರ್ಷಕ್ಕೊಮ್ಮೆ ಖಾತೆಯ ಭೌತಿಕ ಹೇಳಿಕೆಯನ್ನು ಸಹ ಸ್ವೀಕರಿಸುತ್ತಾರೆ.
  • ಅಟಲ್‌ ಪಿಂಚಣಿ ಯೋಜನೆಯ ಭೌತಿಕ ಹೇಳಿಕೆಯನ್ನು ವಾರ್ಷಿಕವಾಗಿ ಚಂದಾದಾರರಿಗೆ ಒದಗಿಸಲಾಗುತ್ತದೆ.
  • ನಿವಾಸ / ಸ್ಥಳ ಬದಲಾವಣೆಯ ಸಂದರ್ಭದಲ್ಲಿಯೂ ಸಹ ಕೊಡುಗೆಯನ್ನು ಸ್ವಯಂ ಡೆಬಿಟ್ ಮೂಲಕ ಅಡೆತಡೆಯಿಲ್ಲದೆ ರವಾನಿಸಬಹುದು.
  • ಈ ಯೋಜನೆ ಭಾರತೀಯ ನಾಗರಿಕರಿಗೆ ಮಾತ್ರ ತೆರೆದಿರುತ್ತದೆ.
  • ಚಂದಾದಾರರು ವರ್ಷಕ್ಕೊಮ್ಮೆ ಏಪ್ರಿಲ್ ತಿಂಗಳಲ್ಲಿ ಆಟೋ ಡೆಬಿಟ್ ಸೌಲಭ್ಯದ ವಿಧಾನವನ್ನು (ಮಾಸಿಕ/ತ್ರೈಮಾಸಿಕ/ಅರ್ಧ ವಾರ್ಷಿಕ) ಬದಲಾಯಿಸಬಹುದು.

ಅಟಲ್‌ ಪಿಂಚಣಿ ಯೋಜನೆಯ ಗುಣಲಕ್ಷಣಗಳು

ಗುಣಲಕ್ಷಣಗಳು ವಿವರಣೆ
ಯೋಜನೆಯ ಹೆಸರು ಅಟಲ್ ಪಿಂಚಣಿ ಯೋಜನೆ (APY)
ಪ್ರಾರಂಭ ದಿನಾಂಕ ಮೇ 9, 2015
ಗುರಿ ಅಸಂಘಟಿತ ಕ್ಷೇತ್ರದ ಕಾರ್ಮಿಕರಿಗೆ ನಿವೃತ್ತಿ ನಂತರ ಆರ್ಥಿಕ ಭದ್ರತೆ ಒದಗಿಸುವುದು
ಆಡಳಿತ ಸಂಸ್ಥೆ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA)
ಪಿಂಚಣಿ ಮೊತ್ತ ರೂ. 1,000, ರೂ. 2,000, ರೂ. 3,000, ರೂ. 4,000, ಅಥವಾ ರೂ. 5,000 ಪ್ರತಿ ತಿಂಗಳು (60 ವರ್ಷದಿಂದ ಆರಂಭ)
ಸೇರುವ ವಯಸ್ಸು 18 ರಿಂದ 40 ವರ್ಷಗಳು
ಕೊಡುಗೆ ಅವಧಿ ಕನಿಷ್ಠ 20 ವರ್ಷಗಳು (60 ವರ್ಷ ತಲುಪುವವರೆಗೆ)
ಅರ್ಹತೆ ಭಾರತೀಯ ನಾಗರಿಕ, ಉಳಿತಾಯ ಖಾತೆ ಹೊಂದಿರುವವರು, ಆದಾಯ ತೆರಿಗೆದಾರರಲ್ಲದವರು (1 ಅಕ್ಟೋಬರ್ 2022 ರಿಂದ
ಕೊಡುಗೆ ವಿಧಾನ ಮಾಸಿಕ, ತ್ರೈಮಾಸಿಕ, ಅಥವಾ ಅರ್ಧವಾರ್ಷಿಕವಾಗಿ ಆಟೋ-ಡೆಬಿಟ್ ಮೂಲಕ
ಸರ್ಕಾರಿ ಖಾತರಿ ಹೂಡಿಕೆ ಲಾಭ ಕಡಿಮೆಯಾದರೆ ಸರ್ಕಾರವು ಕನಿಷ್ಠ ಪಿಂಚಣಿ ಭರವಸೆ ನೀಡುತ್ತದೆ
ಪೂರ್ವಭಾವಿ ನಿರ್ಗಮನ ಗಂಭೀರ ರೋಗ ಅಥವಾ ಮರಣದ ಸಂದರ್ಭದಲ್ಲಿ ಮಾತ್ರ; ಕೊಡುಗೆ ಮತ್ತು ಬಡ್ಡಿ ಮರಳಿ ನೀಡಲಾಗುತ್ತದೆ.

ಪ್ರಶ್ನೋತ್ತರಗಳು

  1. ಅಟಲ್ ಪಿಂಚಣಿ ಯೋಜನೆ ಎಂದರೇನು?
    ಇದು ಭಾರತ ಸರ್ಕಾರದಿಂದ ಪ್ರಾರಂಭಿಸಲಾದ ಪಿಂಚಣಿ ಯೋಜನೆಯಾಗಿದ್ದು, ಅಸಂಘಟಿತ ಕ್ಷೇತ್ರದ ಕಾರ್ಮಿಕರಿಗೆ 60 ವರ್ಷದ ನಂತರ ಸ್ಥಿರ ಆದಾಯ ಒದಗಿಸುವ ಗುರಿಯನ್ನು ಹೊಂದಿದೆ.
  2. ಯಾರು ಈ ಯೋಜನೆಗೆ ಸೇರಬಹುದು?
    18 ರಿಂದ 40 ವರ್ಷ ವಯಸ್ಸಿನ ಭಾರತೀಯ ನಾಗರಿಕರು, ಉಳಿತಾಯ ಖಾತೆ ಹೊಂದಿರುವವರು ಮತ್ತು ಆದಾಯ ತೆರಿಗೆ ಪಾವತಿಸದವರು ಸೇರಬಹುದು.
  3. ಪಿಂಚಣಿ ಮೊತ್ತ ಎಷ್ಟು ಪಡೆಯಬಹುದು?
    ನೀವು ತಿಂಗಳಿಗೆ 1,000 ರೂ. , 2,000 ರೂ. , 3,000 ರೂ. , 4,000 ರೂ. ಅಥವಾ 5,000 ರೂ. ಪಿಂಚಣಿಯನ್ನು ಆಯ್ಕೆ ಮಾಡಬಹುದು, ಇದು 60 ವರ್ಷದಿಂದ ಆರಂಭವಾಗುತ್ತದೆ.
  4. ಮಾಸಿಕ ಕೊಡುಗೆ ಎಷ್ಟು ತುಂಬಬೇಕು?
    ಇದು ನೀವು ಸೇರುವ ವಯಸ್ಸು ಮತ್ತು ಆಯ್ಕೆ ಮಾಡಿದ ಪಿಂಚಣಿ ಮೊತ್ತದ ಮೇಲೆ ಅವಲಂಬಿತವಾಗಿದೆ. ಉದಾಹರಣೆಗೆ, 18 ವರ್ಷದಲ್ಲಿ ರೂ. 1,000 ಪಿಂಚಣಿಗೆ ರೂ. 42, ಆದರೆ 40 ವರ್ಷದಲ್ಲಿ 291 ರೂ. ಆಗಿರಲಿದೆ.
  5. ಕೊಡುಗೆ ಎಷ್ಟು ಕಾಲ ತುಂಬಬೇಕು?
    ಕನಿಷ್ಠ 20 ವರ್ಷಗಳಿಂದ (40 ವರ್ಷದಲ್ಲಿ ಸೇರಿದರೆ) 42 ವರ್ಷಗಳವರೆಗೆ (18 ವರ್ಷದಲ್ಲಿ ಸೇರಿದರೆ), ಅಂದರೆ 60 ವರ್ಷ ತಲುಪುವವರೆಗೆ.
  6. ಹಣವನ್ನು ಹೇಗೆ ಪಾವತಿಸುವುದು?
    ಮಾಸಿಕ, ತ್ರೈಮಾಸಿಕ ಅಥವಾ ಅರ್ಧವಾರ್ಷಿಕವಾಗಿ ಆಟೋ-ಡೆಬಿಟ್ ಮೂಲಕ ನಿಮ್ಮ ಬ್ಯಾಂಕ್ ಖಾತೆಯಿಂದ ಪಾವತಿಸಬಹುದು.
  7. ನಾನು ಮರಣ ಹೊಂದಿದರೆ ಏನಾಗುತ್ತದೆ?
    60 ವರ್ಷದ ಮೊದಲು ಮರಣವಾದರೆ, ಸಂಗಾತಿ ಕೊಡುಗೆ ಮುಂದುವರಿಸಬಹುದು ಅಥವಾ ಮೊತ್ತವನ್ನು ತೆಗೆದುಕೊಳ್ಳಬಹುದು. 60 ರ ನಂತರ ಸಂಗಾತಿಗೆ ಪಿಂಚಣಿ ಮುಂದುವರಿಯುತ್ತದೆ. ಬಳಿಕ ಗೊತ್ತುಪಡಿಸಿದವರಿಗೆ ಮೊತ್ತ (ರೂ. 1.7 ಲಕ್ಷದಿಂದ ರೂ. 8.5 ಲಕ್ಷ) ಸಿಗುತ್ತದೆ.
  8. ತೆರಿಗೆ ಪ್ರಯೋಜನಗಳು ಇವೆಯೇ?
    ಹೌದು, ಸೆಕ್ಷನ್ 80CCD(1) ಅಡಿ ರೂ. 1.5 ಲಕ್ಷ ಮತ್ತು 80CCD(1B) ಅಡಿ ರೂ. 50,000 ತೆರಿಗೆ ವಿನಾಯಿತಿ ಲಭ್ಯವಿದೆ (ತೆರಿಗೆ ವಿಧಾನಕ್ಕೆ ಒಳಪಟ್ಟು).
  9. ಈ ಯೋಜನೆಗೆ ಹೇಗೆ ಸೇರಬೇಕು?
    ನಿಮ್ಮ ಬ್ಯಾಂಕ್ ಅಥವಾ ಅಂಚೆ ಕಚೇರಿಗೆ ಭೇಟಿ ನೀಡಿ, ಅಟಲ್‌ ಪಿಂಚಣಿ ಯೋಜನೆ ಅರ್ಜಿ ಭರ್ತಿ ಮಾಡಿ, ಖಾತೆ ವಿವರಗಳನ್ನು ನೀಡಿ, ಮತ್ತು ಮೊದಲ ಕೊಡುಗೆ ತುಂಬಿ.
  10. ಸರ್ಕಾರದಿಂದ ಯಾವುದೇ ಸಹಾಯವಿದೆಯೇ?
    ಈ ಹಿಂದೆ (2015-16 ರಿಂದ 2019-20) ಸರ್ಕಾರಿ ಸಹ-ಕೊಡುಗೆ ಇತ್ತು (ರೂ. 1,000 ಅಥವಾ 50%), ಆದರೆ ಈಗ ಹೊಸ ಸೇರುವವರಿಗೆ ಇಲ್ಲ. ಆದರೆ ಪಿಂಚಣಿ ಖಾತರಿಗೆ ಸರ್ಕಾರ ಬೆಂಬಲ ನೀಡುತ್ತದೆ.
]]>
Fri, 23 Jan 2026 10:54:04 +0530 shivuagrico
Prothsahadana yojane 2026&SSLC ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ರೂ.ವರೆಗೆ ಸಹಾಯಧನ! https://krushirushi.in/Prothsahadana-yojane-2026 https://krushirushi.in/Prothsahadana-yojane-2026 Prothsahadana yojane 2026-ಪ್ರೋತ್ಸಾಹ ಧನ ಯೋಜನೆ, ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ರೂ.ವರೆಗೆ ಸಹಾಯಧನ!

ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರವು ಒಂದು ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಅದೇ ಪ್ರೋತ್ಸಾಹ ಧನ ಯೋಜನೆ ಅಥವಾ 'ಪ್ರೈಸ್ ಮನಿ ಸ್ಕಾಲರ್‌ಶಿಪ್'. ಶಿಕ್ಷಣದ ವಿವಿಧ ಹಂತಗಳಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ. ಹಣದ ಕೊರತೆಯಿಂದಾಗಿ ಯಾವುದೇ ವಿದ್ಯಾರ್ಥಿ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಏನಿದು ಪ್ರೋತ್ಸಾಹ ಧನ ಯೋಜನೆ?

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ 'ಪ್ರೋತ್ಸಾಹ ಧನ ಯೋಜನೆ' ಯೋಜನೆಯು, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದತ್ತ ಪ್ರೇರೇಪಿಸುವ ಒಂದು ಮಹತ್ವದ ಕಾರ್ಯಕ್ರಮವಾಗಿದೆ. ಈ ಯೋಜನೆಯಡಿ SSLC, PUC, ಪದವಿ, ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ (60% ಕ್ಕಿಂತ ಹೆಚ್ಚು ಅಂಕ) ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ಹಂತಕ್ಕೆ ಅನುಗುಣವಾಗಿ 7,500 ರೂಪಾಯಿಗಳಿಂದ ಗರಿಷ್ಠ 50,000 ರೂಪಾಯಿಗಳವರೆಗೆ ಏಕಕಾಲದ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತಿದ್ದು, ಪ್ರತಿಭೆಯನ್ನು ಗೌರವಿಸಿ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಆಶಯವಾಗಿದೆ.

ಯೋಜನೆಯ ಪ್ರಮುಖ ಅಂಶಗಳು

  • ನೇರ ನಗದು ವರ್ಗಾವಣೆ: ಈ ಯೋಜನೆಯಡಿ ಸಿಗುವ ಪ್ರೋತ್ಸಾಹಧನವು ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ, ಪಾರದರ್ಶಕವಾಗಿ ನೇರವಾಗಿ ಅರ್ಹ ವಿದ್ಯಾರ್ಥಿಯ ಆಧಾರ್ ಸಂಯೋಜಿತ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.
  • ಅಂಕಗಳ ಆಧಾರಿತ ನೆರವು: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಹಂತದಲ್ಲಿ (SSLC ಯಿಂದ ಸ್ನಾತಕೋತ್ತರ ಪದವಿಯವರೆಗೆ) ಗಳಿಸಿದ ಶೈಕ್ಷಣಿಕ ಸಾಧನೆ ಮತ್ತು ಅಂಕಗಳ ಶೇಕಡಾವಾರು ಪ್ರಮಾಣವನ್ನು ಆಧರಿಸಿ ಆರ್ಥಿಕ ಸಹಾಯದ ಮೊತ್ತವನ್ನು ನಿಗದಿಪಡಿಸಲಾಗಿದೆ.
  • ಶೈಕ್ಷಣಿಕ ಪ್ರೋತ್ಸಾಹ: ಪ್ರತಿಭಾವಂತ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಗೌರವಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುವುದು ಮತ್ತು ಹಣಕಾಸಿನ ಅಡಚಣೆಯಿಲ್ಲದೆ ಉನ್ನತ ವ್ಯಾಸಂಗವನ್ನು ಮುಂದುವರಿಸಲು ಅವರಿಗೆ ಬೆಂಬಲ ನೀಡುವುದು ಈ ಯೋಜನೆಯ ಆಶಯವಾಗಿದೆ.
  • ಪ್ರಥಮ ಪ್ರಯತ್ನದ ಸಾಧನೆ: ಅಭ್ಯರ್ಥಿಗಳು ತಮ್ಮ ಪರೀಕ್ಷೆಗಳನ್ನು ಮೊದಲ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದುವುದನ್ನು ಇದು ಕಡ್ಡಾಯಗೊಳಿಸುವ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುತ್ತದೆ.

ಯಾವ ಕೋರ್ಸ್‌ಗೆ ಎಷ್ಟು ಪ್ರೋತ್ಸಾಹಧನ ಸಿಗಲಿದೆ?

  • ಹತ್ತನೇ ತರಗತಿಯಲ್ಲಿ ಶೇ. 60 ರಿಂದ ಶೇ. 75 ರಷ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 7,500 ರೂಪಾಯಿ ಹಾಗೂ ಶೇ. 75 ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ 15,000 ರೂಪಾಯಿ ನೀಡಲಾಗುತ್ತದೆ.
  • ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ ಕೋರ್ಸ್‌ಗಳನ್ನು ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ 20,000 ರೂಪಾಯಿ ಧನಸಹಾಯ ಸಿಗಲಿದೆ.
  • ಬಿ.ಎ, ಬಿ.ಎಸ್ಸಿ, ಬಿ.ಕಾಂ ನಂತಹ ಯಾವುದೇ ಸಾಮಾನ್ಯ ಪದವಿಗಳನ್ನು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದವರಿಗೆ ಸರ್ಕಾರದಿಂದ 25,000 ರೂಪಾಯಿ ಪ್ರೋತ್ಸಾಹಧನ ದೊರೆಯುತ್ತದೆ.
  • ಎಂ.ಎ, ಎಂ.ಎಸ್ಸಿ ಅಥವಾ ಎಂ.ಕಾಂ ನಂತಹ ಸ್ನಾತಕೋತ್ತರ ಪದವಿಗಳನ್ನು ಯಶಸ್ವಿಯಾಗಿ ಮುಗಿಸಿದ ಅಭ್ಯರ್ಥಿಗಳಿಗೆ 30,000 ರೂಪಾಯಿ ನೀಡಲಾಗುತ್ತದೆ.
  • ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ ವಿಜ್ಞಾನ ಅಥವಾ ಪಶು ವೈದ್ಯಕೀಯದಂತಹ ಉನ್ನತ ವೃತ್ತಿಪರ ಪದವಿಗಳನ್ನು ಪೂರ್ಣಗೊಳಿಸಿದವರಿಗೆ 35,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ.
  • ಸ್ನಾತಕೋತ್ತರ ಪದವಿಯಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ 1 ರಿಂದ 5ನೇ ರ್ಯಾಂಕ್ ಪಡೆದ ಸಾಧಕರಿಗೆ ವಿಶೇಷವಾಗಿ 50,000 ರೂಪಾಯಿ ಭಾರಿ ಮೊತ್ತದ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು

  • ಅಭ್ಯರ್ಥಿಯು ಕಡ್ಡಾಯವಾಗಿ ಕರ್ನಾಟಕದವರಾಗಿರಬೇಕು ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು.
  • ಅಭ್ಯರ್ಥಿಯು ಕೋರ್ಸ್ ಅನ್ನು ಪ್ರಥಮ ಪ್ರಯತ್ನದಲ್ಲೇ ಪೂರ್ಣಗೊಳಿಸಿರಬೇಕು.
  • ಕನಿಷ್ಠ ಶೇ. 60 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.
  • ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಸೀಡಿಂಗ್ ಆಗಿರಬೇಕು.
  • ಏಪ್ರಿಲ್-2025ರ SSLC ಪರೀಕ್ಷೆಯಲ್ಲಿ ಶೇ. 60 ಕ್ಕೂ ಹೆಚ್ಚು ಅಂಕ ಪಡೆದು ಆಧಾರ್ ಸೀಡ್ ಆಗಿರುವ ಮತ್ತು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಿರುತ್ತದೆ, ಅಂತಹ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು

  • ಅಭ್ಯರ್ಥಿಯು ಕಡ್ಡಾಯವಾಗಿ ಕರ್ನಾಟಕದವರಾಗಿರಬೇಕು ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು.
  • ಅಭ್ಯರ್ಥಿಯು ಕೋರ್ಸ್ ಅನ್ನು ಪ್ರಥಮ ಪ್ರಯತ್ನದಲ್ಲೇ ಪೂರ್ಣಗೊಳಿಸಿರಬೇಕು.
  • ಕನಿಷ್ಠ ಶೇ. 60 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.
  • ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಸೀಡಿಂಗ್ ಆಗಿರಬೇಕು.
  • ಏಪ್ರಿಲ್-2025ರ SSLC ಪರೀಕ್ಷೆಯಲ್ಲಿ ಶೇ. 60 ಕ್ಕೂ ಹೆಚ್ಚು ಅಂಕ ಪಡೆದು ಆಧಾರ್ ಸೀಡ್ ಆಗಿರುವ ಮತ್ತು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಿರುತ್ತದೆ, ಅಂತಹ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು

  • ಅಭ್ಯರ್ಥಿಯು ಕಡ್ಡಾಯವಾಗಿ ಕರ್ನಾಟಕದವರಾಗಿರಬೇಕು ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು.
  • ಅಭ್ಯರ್ಥಿಯು ಕೋರ್ಸ್ ಅನ್ನು ಪ್ರಥಮ ಪ್ರಯತ್ನದಲ್ಲೇ ಪೂರ್ಣಗೊಳಿಸಿರಬೇಕು.
  • ಕನಿಷ್ಠ ಶೇ. 60 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.
  • ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಸೀಡಿಂಗ್ ಆಗಿರಬೇಕು.
  • ಏಪ್ರಿಲ್-2025ರ SSLC ಪರೀಕ್ಷೆಯಲ್ಲಿ ಶೇ. 60 ಕ್ಕೂ ಹೆಚ್ಚು ಅಂಕ ಪಡೆದು ಆಧಾರ್ ಸೀಡ್ ಆಗಿರುವ ಮತ್ತು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಿರುತ್ತದೆ, ಅಂತಹ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

  • ಅಂಕಪಟ್ಟಿ
  • ಉತ್ತೀರ್ಣ ಪ್ರಮಾಣಪತ್ರ
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್‌ಬುಕ್ ಪ್ರತಿ.
  • ವಿದ್ಯಾರ್ಥಿಯ ಇತ್ತೀಚಿನ ಫೋಟೋ

ಅರ್ಜಿ ಸಲ್ಲಿಕೆ ಹೇಗೆ?

  • ಮೊದಲು ಕರ್ನಾಟಕ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ swdservices.karnataka.gov.in/ ಗೆ ಭೇಟಿ ನೀಡಬೇಕು.
  • ವೆಬ್‌ಸೈಟ್‌ನಲ್ಲಿ ನೀಡಲಾದ 'Prize Money Scholarship' ಲಿಂಕ್ swdservices.karnataka.gov.in/PrizeMoneyClientApp/ ಮೇಲೆ ಕ್ಲಿಕ್ ಮಾಡಿ, ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ವೈಯಕ್ತಿಕ ವಿವರಗಳನ್ನು ನಮೂದಿಸಿ ನೋಂದಣಿ ಮಾಡಿಕೊಳ್ಳಬೇಕು.
  • ನಿಮ್ಮ ಶೈಕ್ಷಣಿಕ ವಿವರಗಳಾದ ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ, ಉತ್ತೀರ್ಣರಾದ ವರ್ಷ, ಪಡೆದ ಅಂಕಗಳು ಮತ್ತು ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಮಾಹಿತಿಯನ್ನು ನಿಖರವಾಗಿ ಭರ್ತಿ ಮಾಡಬೇಕು.
  • ಕೇಳಲಾದ ಅಗತ್ಯ ದಾಖಲೆಗಳಾದ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ ಹಾಗೂ ಬ್ಯಾಂಕ್ ಪಾಸ್‌ಬುಕ್‌ನ ಸ್ಕ್ಯಾನ್ ಪ್ರತಿಗಳನ್ನು ಸರಿಯಾದ ಗಾತ್ರದಲ್ಲಿ ಅಪ್‌ಲೋಡ್ ಮಾಡಬೇಕು.
  • ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಪರೀಕ್ಷಿಸಿದ ನಂತರ, ಅರ್ಜಿಯನ್ನು ಸಬ್‌ಮಿಟ್ ಮಾಡಿ. ಅರ್ಜಿ ಸಲ್ಲಿಕೆಯಾದ ನಂತರ ಸಿಗುವ 'ಅಕ್ನಾಲೆಜ್‌ಮೆಂಟ್' ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಎಂದು?

ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳು ಪ್ರೈಸ್ ಮನಿ ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಲು 2026ರ ಜನವರಿ 31 ಕೊನೆಯ ದಿನಾಂಕವಾಗಿದೆ. ವಿದ್ಯಾರ್ಥಿಗಳು ನಿಗದಿತ ಸಮಯದೊಳಗೆ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಪೂರ್ಣಗೊಳಿಸಬೇಕೆಂದು ಸೂಚಿಸಲಾಗಿದೆ. ಕೊನೆಯ ಕ್ಷಣದ ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ಅಭ್ಯರ್ಥಿಗಳು ಅಂತಿಮ ದಿನಾಂಕಕ್ಕಿಂತ ಮೊದಲೇ ತಮ್ಮ ಅಂಕಪಟ್ಟಿ, ಆಧಾರ್ ಮತ್ತು ಬ್ಯಾಂಕ್ ವಿವರಗಳೊಂದಿಗೆ ನೋಂದಣಿ ಮಾಡಿಕೊಳ್ಳುವುದು ಸೂಕ್ತ.

ಪ್ರಶ್ನೋತ್ತರಗಳು

  1. ಖಾಸಗಿ ಕಾಲೇಜಿನಲ್ಲಿ ಓದಿದವರಿಗೆ ಈ ಸೌಲಭ್ಯ ಸಿಗುತ್ತದೆಯೇ?

ಹೌದು, ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಖಾಸಗಿ ವಿಶ್ವವಿದ್ಯಾಲಯ ಅಥವಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

  1. ಹಣ ಜಮೆಯಾಗದಿದ್ದರೆ ಯಾರನ್ನು ಸಂಪರ್ಕಿಸಬೇಕು?

    ಅರ್ಜಿ ಸಲ್ಲಿಸಿದ ನಂತರವೂ ಹಣ ಬರದಿದ್ದರೆ, ನಿಮ್ಮ ಹತ್ತಿರದ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ದಾಖಲೆಗಳನ್ನು ಪರಿಶೀಲಿಸಿಕೊಳ್ಳಿ.
  2. ದೂರಶಿಕ್ಷಣ ಪಡೆದವರಿಗೆ ಇದು ಅನ್ವಯಿಸುತ್ತದೆಯೇ?

    ಸಾಮಾನ್ಯವಾಗಿ ರೆಗ್ಯುಲರ್ ವಿದ್ಯಾರ್ಥಿಗಳಿಗೆ ಆದ್ಯತೆ ಇರುತ್ತದೆ. ಆದರೂ ಮಾನ್ಯತೆ ಪಡೆದ ವಿವಿಗಳಿಂದ ಪದವಿ ಪಡೆದವರು ಇಲಾಖೆಯ ನಿಯಮಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಬಹುದು.
]]>
Fri, 23 Jan 2026 07:10:29 +0530 shivuagrico
Deepika scholarship&ದೀಪಿಕಾ ವಿದ್ಯಾರ್ಥಿವೇತನಯೋಜನೆಯಡಿ 30,000 ರೂಪಾಯಿ ವಿದ್ಯಾರ್ಥಿವೇತನ https://krushirushi.in/Deepika-scholarship-2026 https://krushirushi.in/Deepika-scholarship-2026 Deepika scholarship-ದೀಪಿಕಾ ವಿದ್ಯಾರ್ಥಿವೇತನಯೋಜನೆಯಡಿ 30,000 ರೂಪಾಯಿ ವಿದ್ಯಾರ್ಥಿವೇತನ

ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಆರ್ಥಿಕ ಪ್ರೋತ್ಸಾಹ ನೀಡಿ ಬೆಂಬಲಿಸುವ ಉದ್ದೇಶದಿಂದ ದೀಪಿಕಾ ವಿದ್ಯಾರ್ಥಿವೇತನ ಯೋಜನೆ ಜಾರಿಯಾಗಿದೆ. ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್‌ಜೀ ಫೌಂಡೇಶನ್ ಜಂಟಿಯಾಗಿ ಹಮ್ಮಿಕೊಂಡಿರುವ 'ದೀಪಿಕಾ ವಿದ್ಯಾರ್ಥಿವೇತನ' ಯೋಜನೆಗೆ ರಾಜ್ಯಾದ್ಯಂತ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಇದೀಗ ವಿದ್ಯಾರ್ಥಿಗಳಿಂದ ಎರಡನೇ ಹಂತದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 2025 ರಲ್ಲಿ ಆರಂಭವಾದ ಈ ಯೋಜನೆಯಡಿ ಈಗಾಗಲೇ ಹಲವಾರು ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಂಡಿದ್ದಾರೆ. ರಾಜ್ಯದ ಹೆಣ್ಣುಮಕ್ಕಳ ಉನ್ನತ ಶಿಕ್ಷಣದ ಹಾದಿಯನ್ನು ಸುಗಮಗೊಳಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ದೀಪಿಕಾ ವಿದ್ಯಾರ್ಥಿವೇತನ ಯೋಜನೆ? ಅರ್ಜಿ ಸಲ್ಲಿಸುವುದು ಹೇಗೆ? ಏನೆಲ್ಲಾ ಪ್ರಯೋಜನಗಳು ಲಭ್ಯ ಇತ್ಯಾದಿ ಮಾಹಿತಿಗಳು ಇಲ್ಲಿವೆ.

ಏನಿದು ದೀಪಿಕಾ ವಿದ್ಯಾರ್ಥಿವೇತನ ಯೋಜನೆ?

ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್‌ಜೀ ಫೌಂಡೇಶನ್ ಸಹಯೋಗದಲ್ಲಿ ಆರಂಭಿಸಲಾದ 'ದೀಪಿಕಾ ವಿದ್ಯಾರ್ಥಿವೇತನ' ಯೋಜನೆಯು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ 10ನೇ ತರಗತಿ ಹಾಗೂ ಪಿಯುಸಿ ಪೂರೈಸಿ, ಪ್ರಸ್ತುತ ಪದವಿ ಅಥವಾ ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ. ಆರ್ಥಿಕ ನೆರವು ನೀಡುತ್ತದೆ. ಹೆಣ್ಣುಮಕ್ಕಳ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ಮತ್ತು ಆರ್ಥಿಕ ಅಡೆತಡೆಗಳನ್ನು ನಿವಾರಿಸುವ ಉದ್ದೇಶ ಹೊಂದಿರುವ ಈ ಯೋಜನೆಯಡಿ, ವಿದ್ಯಾರ್ಥಿನಿಯರು ತಮ್ಮ ಇಡೀ ಕೋರ್ಸ್ ಅವಧಿಯವರೆಗೆ ಈ ಸೌಲಭ್ಯವನ್ನು ಪಡೆಯಬಹುದು. ಆದರೆ ವ್ಯಾಸಂಗದ ಅವಧಿಯಲ್ಲಿ ಯಾವುದೇ ವಿಷಯಗಳಲ್ಲಿ ಅನುತ್ತೀರ್ಣರಾಗದೆ ಯಶಸ್ವಿಯಾಗಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.

ದೀಪಿಕಾ ವಿದ್ಯಾರ್ಥಿವೇತನದ ಉದ್ದೇಶಗಳೇನು?

ಅಜೀಂ ಪ್ರೇಮ್‌ಜೀ ವಿದ್ಯಾರ್ಥಿವೇತನದ ಮುಖ್ಯ ಉದ್ದೇಶವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಹಿನ್ನೆಲೆಯಿಂದ ಬಂದ ವಿದ್ಯಾರ್ಥಿನಿಯರು ತಮ್ಮ ಕಾಲೇಜು ಶಿಕ್ಷಣವನ್ನು ಮುಂದುವರಿಸಲು ಬೆಂಬಲ ನೀಡುವುದಾಗಿದೆ. ಭಾರತದಲ್ಲಿ ಶಿಕ್ಷಣದ ಗುಣಮಟ್ಟ ಮತ್ತು ಸಮಾನತೆಯನ್ನು ಸುಧಾರಿಸುವಲ್ಲಿ ಅಜೀಂ ಪ್ರೇಮ್‌ಜೀ ಫೌಂಡೇಶನ್ ಹೊಂದಿರುವ ಬದ್ಧತೆಯ ಭಾಗವಾಗಿ ಈ ಮಹತ್ವದ ಉಪಕ್ರಮವನ್ನು ಕೈಗೊಳ್ಳಲಾಗಿದೆ.

ಯೋಜನೆಯ ಪ್ರಮುಖ ವೈಶಿಷ್ಟ್ಯಗಳು

  • ಈ ಯೋಜನೆಯಡಿ ಆಯ್ಕೆಯಾದ ಅರ್ಹ ವಿದ್ಯಾರ್ಥಿನಿಯರಿಗೆ ವಾರ್ಷಿಕವಾಗಿ 30,000 ರೂ. ಶಿಷ್ಯವೇತನವನ್ನು ನೀಡಲಾಗುತ್ತದೆ.
  • ಈ ಧನಸಹಾಯವು ವಿದ್ಯಾರ್ಥಿನಿಯು ಆಯ್ದುಕೊಂಡ ಇಡೀ ಕೋರ್ಸ್ ಅವಧಿಯವರೆಗೆ ಮುಂದುವರಿಯುತ್ತದೆ.
  • ನಾಲ್ಕು ವರ್ಷಗಳ ಪದವಿ ಕೋರ್ಸ್‌ (ಉದಾಹರಣೆಗೆ ಎಂಜಿನಿಯರಿಂಗ್) ಓದುತ್ತಿರುವ ವಿದ್ಯಾರ್ಥಿನಿಯರು ಒಟ್ಟು 1,20,000 ರೂ. ಸಹಾಯಧನ ಪಡೆಯುತ್ತಾರೆ.
  • ಮೂರು ವರ್ಷಗಳ ಸಾಮಾನ್ಯ ಪದವಿ ಕೋರ್ಸ್‌ಗಳನ್ನು ವ್ಯಾಸಂಗ ಮಾಡುತ್ತಿರುವವರು ಒಟ್ಟು 90,000 ರೂ. ಪ್ರೋತ್ಸಾಹಧನವನ್ನು ಪಡೆಯಲಿದ್ದಾರೆ.
  • ಇನ್ನು ಎರಡು ವರ್ಷಗಳ ಡಿಪ್ಲೊಮಾ ಕೋರ್ಸ್‌ಗಳನ್ನು ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಒಟ್ಟು 60,000 ರೂ. ಆರ್ಥಿಕ ನೆರವು ದೊರೆಯಲಿದೆ.

ಅರ್ಹತಾ ಮಾನದಂಡಗಳೇನು?

  • ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಕೇವಲ ಹೆಣ್ಣುಮಕ್ಕಳಿಗೆ ಮಾತ್ರ ಅವಕಾಶವಿದ್ದು, ಮಹಿಳಾ ಸಬಲೀಕರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.
  • ಅರ್ಜಿದಾರರು ತಮ್ಮ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಎರಡನ್ನೂ ಕಡ್ಡಾಯವಾಗಿ ಕರ್ನಾಟಕದ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಕಾಲೇಜುಗಳಲ್ಲಿಯೇ ಪೂರೈಸಿರಬೇಕು.
  • ಅಭ್ಯರ್ಥಿಗಳು 2025-26ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ಸಾಮಾನ್ಯ ಪದವಿ, ವೃತ್ತಿಪರ ಪದವಿ ಅಥವಾ ಕನಿಷ್ಠ 3 ವರ್ಷಗಳ ಡಿಪ್ಲೊಮಾ ಕೋರ್ಸ್‌ಗೆ ದಾಖಲಾಗಿರಬೇಕು.
  • ವಿದ್ಯಾರ್ಥಿನಿಯರು ತಮ್ಮ ಉನ್ನತ ಶಿಕ್ಷಣದ ಪ್ರತಿ ಸೆಮಿಸ್ಟರ್ ಅಥವಾ ವಾರ್ಷಿಕ ಪರೀಕ್ಷೆಗಳಲ್ಲಿ ಯಾವುದೇ ವಿಷಯವನ್ನು ಬಾಕಿ ಉಳಿಸಿಕೊಳ್ಳದೆ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.
  • ಒಂದು ವೇಳೆ ವಿದ್ಯಾರ್ಥಿನಿಯು ಯಾವುದಾದರೂ ವಿಷಯದಲ್ಲಿ ಅನುತ್ತೀರ್ಣರಾದರೆ ಅಥವಾ ಬ್ಯಾಕ್‌ಲಾಗ್ ಹೊಂದಿದ್ದರೆ, ಅಂತಹವರಿಗೆ ಮುಂದಿನ ಹಂತದ ವಿದ್ಯಾರ್ಥಿವೇತನವನ್ನು ತಕ್ಷಣವೇ ಸ್ಥಗಿತಗೊಳಿಸಲಾಗುತ್ತದೆ.

ಎರಡನೇ ಹಂತದ ಅರ್ಜಿ ಸಲ್ಲಿಕೆ ಆರಂಭ

ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಮಂಜುಶ್ರೀ ಎನ್. ಅವರ ಪ್ರಕಾರ, ಮೊದಲ ಹಂತದ ಅರ್ಜಿ ಸಲ್ಲಿಕೆಯು ಇತ್ತೀಚೆಗೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಜನವರಿ 1, 2026 ರಿಂದ ಎರಡನೇ ಹಂತದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 31ರವರೆಗೆ ಕಾಲಾವಕಾಶ ನೀಡಲಾಗಿದೆ. ಮುಖ್ಯವಾಗಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿನಿಯರಿಗೆ ಅನುಕೂಲವಾಗುವಂತೆ ಈ ಎರಡನೇ ಹಂತವನ್ನು ತೆರೆಯಲಾಗಿದೆ. ಸುಮಾರು 37,000 ವಿದ್ಯಾರ್ಥಿನಿಯರನ್ನು ಗುರಿಯಾಗಿಟ್ಟುಕೊಂಡು ಈ ಯೋಜನೆ ಆರಂಭಿಸಲಾಗಿತ್ತು. ಆದರೆ, ಒಂದು ವೇಳೆ ಅರ್ಹ ಅಭ್ಯರ್ಥಿಗಳ ಸಂಖ್ಯೆ 40,000 ದಾಟಿದರೂ ಸರ್ಕಾರವೇ ಅವರ ಶಿಕ್ಷಣದ ವೆಚ್ಚವನ್ನು ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಅರ್ಜಿ ಸಲ್ಲಿಸಲು ಅಜೀಂ ಪ್ರೇಮ್‌ಜೀ ಫೌಂಡೇಶನ್‌ನ ಅಧಿಕೃತ ವೆಬ್‌ಸೈಟ್ azimpremjifoundation.org/what-we-do/education/azim-premji-scholarship/ ಗೆ ಭೇಟಿ ನೀಡಬೇಕು.
  • ಮೊದಲು ನಿಮ್ಮ ಹೆಸರನ್ನು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು ಅಥವಾ ಈಗಾಗಲೇ ಖಾತೆ ಹೊಂದಿದ್ದರೆ ಲಾಗಿನ್ ವಿವರಗಳನ್ನು ಬಳಸಿ ಪ್ರವೇಶಿಸಬೇಕು.
  • ನಿಮ್ಮ ವೈಯಕ್ತಿಕ ಮಾಹಿತಿ, ಶೈಕ್ಷಣಿಕ ವಿವರಗಳು ಮತ್ತು ಬ್ಯಾಂಕ್ ಖಾತೆಯ ಮಾಹಿತಿಯನ್ನು ಅರ್ಜಿಯಲ್ಲಿ ನಿಖರವಾಗಿ ನಮೂದಿಸಬೇಕು.
  • ಆಧಾರ್ ಕಾರ್ಡ್, ಅಂಕಪಟ್ಟಿಗಳು, ಕಾಲೇಜಿನ ಬೋನಫೈಡ್ ಪ್ರಮಾಣಪತ್ರ ಮತ್ತು ಬ್ಯಾಂಕ್ ಪಾಸ್‌ಬುಕ್‌ನ ಸ್ಪಷ್ಟವಾದ ಸ್ಕ್ಯಾನ್ ಪ್ರತಿಗಳನ್ನು ಅಪ್‌ಲೋಡ್ ಮಾಡಬೇಕು.
  • ಎಲ್ಲಾ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ, ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಅಂತಿಮವಾಗಿ ಸಲ್ಲಿಕೆ ಮಾಡಬೇಕು.

ನೋಂದಣಿ ಆಗುವುದು ಹೇಗೆ?

  • ಮೊದಲು ಅಜೀಂ ಪ್ರೇಮ್‌ಜೀ ಫೌಂಡೇಶನ್‌ನ ಅಧಿಕೃತ ಪೋರ್ಟಲ್ ಅಥವಾ ಕರ್ನಾಟಕ ಕಾಲೇಜು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ azimpremjifoundation.org/ ಗೆ ಭೇಟಿ ನೀಡಬೇಕು.
  • ವೆಬ್‌ಸೈಟ್‌ನಲ್ಲಿರುವ 'Register' ಅಥವಾ 'Apply Now' ಬಟನ್ ಮೇಲೆ ಕ್ಲಿಕ್ ಮಾಡಿ, ನಿಮ್ಮ ಹೆಸರು, ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ ಹೊಸ ಖಾತೆಯನ್ನು ತೆರೆಯಬೇಕು.
  • ನೋಂದಣಿ ಯಶಸ್ವಿಯಾದ ನಂತರ ನಿಮ್ಮ ಮೊಬೈಲ್‌ಗೆ ಬರುವ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಪೋರ್ಟಲ್‌ಗೆ ಲಾಗಿನ್ ಆಗಬೇಕು.
  • ಲಾಗಿನ್ ಆದ ನಂತರ ತೆರೆಯುವ ಫಾರ್ಮ್‌ನಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ, ಆಧಾರ್ ವಿವರಗಳು ಮತ್ತು ಪೋಷಕರ ಮಾಹಿತಿಯನ್ನು ಭರ್ತಿ ಮಾಡಬೇಕು.
  • ನಿಮ್ಮ 10ನೇ ತರಗತಿ (SSLC) ಮತ್ತು ಪಿಯುಸಿ ಅಂಕಗಳು ಹಾಗೂ ಪ್ರಸ್ತುತ ದಾಖಲಾಗಿರುವ ಕಾಲೇಜಿನ ವಿವರಗಳನ್ನು ಸರಿಯಾಗಿ ನಮೂದಿಸಬೇಕು.
  • ವಿದ್ಯಾರ್ಥಿವೇತನದ ಹಣ ನೇರವಾಗಿ ಜಮೆಯಾಗಲು ನಿಮ್ಮ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐಎಫ್‌ಎಸ್‌ಸಿ (IFSC) ಕೋಡ್ ಅನ್ನು ನಿಖರವಾಗಿ ನೀಡಬೇಕು.
  • ಕೇಳಲಾದ ಎಲ್ಲಾ ಅಗತ್ಯ ದಾಖಲೆಗಳ (ಅಂಕಪಟ್ಟಿ, ಆಧಾರ್, ಫೋಟೋ) ಸ್ಕ್ಯಾನ್ ಪ್ರತಿಗಳನ್ನು ನಿಗದಿತ ಗಾತ್ರದಲ್ಲಿ ಅಪ್‌ಲೋಡ್ ಮಾಡಬೇಕು.
  • ಕೊನೆಯಲ್ಲಿ ಎಲ್ಲಾ ಮಾಹಿತಿ ಸರಿಯಾಗಿದೆಯೇ ಎಂದು ಪರಿಶೀಲಿಸಿ 'Submit' ಬಟನ್ ಒತ್ತಬೇಕು ಮತ್ತು ಮುಂದಿನ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.

ದೀಪಿಕಾ ವಿದ್ಯಾರ್ಥಿವೇತನ ಯೋಜನೆ ಜಾಲತಾಣ

ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್‌ಜೀ ಫೌಂಡೇಶನ್ ಸೆಪ್ಟೆಂಬರ್ 2025 ರಲ್ಲಿ ಜಂಟಿಯಾಗಿ ಆರಂಭಿಸಿದ 'ದೀಪಿಕಾ ವಿದ್ಯಾರ್ಥಿವೇತನ' ಯೋಜನೆಗೆ ಇದೀಗ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಂದ ಒಂದು ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. 2025ರ ಸಾಲಿನ ದೀಪಿಕಾ ವಿದ್ಯಾರ್ಥಿವೇತನದ ಎರಡನೇ ಹಂತದ ನೋಂದಣಿ ಪ್ರಕ್ರಿಯೆಯು ಈಗ ಆರಂಭವಾಗಿದೆ. ಇದರೊಂದಿಗೆ 2024ರ ಸಾಲಿನ ವಿದ್ಯಾರ್ಥಿವೇತನ ನವೀಕರಣದ ಕೊನೆಯ ದಿನಾಂಕವನ್ನು ಜನವರಿ 31, 2026ರವರೆಗೆ ವಿಸ್ತರಿಸಲಾಗಿದೆ. ಅಂದರೆ, ಜನವರಿ 31, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.ಅರ್ಹ ವಿದ್ಯಾರ್ಥಿನಿಯರು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಬೆಂಬಲಕ್ಕಾಗಿ ಕೆಲಸದ ದಿನಗಳಲ್ಲಿ (ಸೋಮವಾರದಿಂದ ಶುಕ್ರವಾರ, ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ) 9019960536 ಸಂಖ್ಯೆಗೆ ವಾಟ್ಸಾಪ್ ಮೂಲಕ ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

  • ಆಧಾರ್ ಕಾರ್ಡ್
  • 10ನೇ ತರಗತಿ ಮತ್ತು ಪಿಯುಸಿ ಅಂಕಪಟ್ಟಿಗಳು.
  • ಕಾಲೇಜಿನ ಪ್ರವೇಶ ಪತ್ರ ಅಥವಾ ಬೋನಫೈಡ್ ಪ್ರಮಾಣಪತ್ರ
  • ಬ್ಯಾಂಕ್ ಪಾಸ್‌ಬುಕ್ ಪ್ರತಿ
  • ಪಾಸ್‌ಪೋರ್ಟ್ ಅಳತೆಯ ಫೋಟೋ ಮತ್ತು ಸಹಿ

 

]]>
Thu, 22 Jan 2026 22:06:25 +0530 shivuagrico
NMNF yojaneಯಡಿ 1,35,733 ರೈತರ ಖಾತೆಗೆ ಎಕರೆಗೆ 2000 ರೂಪಾಯಿ ಜಮಾ https://krushirushi.in/NMNF-Yojane-2026 https://krushirushi.in/NMNF-Yojane-2026 NMNF yojaneಯಡಿ 1,35,733 ರೈತರ ಖಾತೆಗೆ ಎಕರೆಗೆ 2000 ರೂಪಾಯಿ ಜಮಾ


ವಿಕಸಿತ ಭಾರತ 2047'ರ ಗುರಿಯೊಂದಿಗೆ ಸುಸ್ಥಿರ ಮತ್ತು ಹವಾಮಾನ ವೈಪರೀತ್ಯಕ್ಕೆ ಪೂರಕವಾದ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಲು ಕರ್ನಾಟಕ ಸರ್ಕಾರವು ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಅಡಿಯಲ್ಲಿ ಮಹತ್ವದ ಹೆಜ್ಜೆಗಳನ್ನು ಇರಿಸಿದೆ.

ಮಹಿಳಾ ಸ್ವಸಹಾಯ ಸಂಘಗಳ ಒಕ್ಕೂಟವಾದ 'ಸಂಜೀವಿನಿ-KSRLM' ಮೂಲಕ ನೈಸರ್ಗಿಕ ಕೃಷಿಯನ್ನು ಒಂದು ಜೀವನೋಪಾಯದ ಮಾರ್ಗವನ್ನಾಗಿ ರಾಜ್ಯವು ರೂಪಿಸುತ್ತಿದೆ ಎಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ (Dr Shalini Rajneesh) ಅವರು ತಿಳಿಸಿದರು.

ರಾಷ್ಟ್ರ ಮಟ್ಟದ ಮಹಿಳಾ ಸ್ವಸಹಾಯ ಸಂಘಗಳ ನೈಸರ್ಗಿಕ ಕೃಷಿ ಮತ್ತು ಲಕ್ಪತಿ ದೀದಿಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ನೈಸರ್ಗಿಕ ಕೃಷಿಯ ಪ್ರಗತಿಯ ವೇಗ ಆಶದಾಯಕವಾಗಿದ್ದು, ರಾಜ್ಯದ ವಿವಿಧ ಕೃಷಿ ಹವಾಮಾನ ವಲಯಗಳಿಗೆ ಅನುಗುಣವಾಗಿ ನೈಸರ್ಗಿಕ ಕೃಷಿಯನ್ನು ವಿಸ್ತರಿಸಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 990 ಕ್ಲಸ್ಟರ್ಗಳನ್ನು ಆಯ್ಕೆ ಮಾಡಲಾಗಿದ್ದು, 49,500 ಹೆಕ್ಟೇರ್ ಪ್ರದೇಶದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ರೈತರ ಖಾತೆಗೆ ನೇರವಾಗಿ ಜಮೆ:

ನೈಸರ್ಗಿಕ ಕೃಷಿಯಲ್ಲಿ ರಾಜ್ಯದಲ್ಲಿ ರೈತರ ಪಾಲ್ಗೊಳ್ಳುವಿಕೆ ಆಶಾದಾಯಕವಾಗಿದ್ದು ಸರಿಸುಮಾರು 1,35,733 ರೈತರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ರೈತರಿಗೆ ಪ್ರೋತ್ಸಾಹಧನವಾಗಿ ಪ್ರತಿ ಎಕರೆಗೆ 2,000 ರೂ.ಗಳಂತೆ ಒಟ್ಟು 22.90 ಕೋಟಿ ರೂ. ಮೊತ್ತವನ್ನು ಮೊದಲ ಕಂತಿನ ರೂಪದಲ್ಲಿ ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ.

ರಾಜ್ಯದಲ್ಲಿ ನೈಸರ್ಗಿಕ ಕೃಷಿ ಮೂಲಸೌಕರ್ಯ ಪರಿಕರಗಳಿಗಾಗಿ 189 ಜೈವಿಕ ಇನ್ಪುಟ್ ಸಂಪನ್ಮೂಲ ಕೇಂದ್ರಗಳನ್ನು (Bio-input Resource Centres) ಸ್ಥಾಪಿಸಲಾಗಿದೆ. ಮಹಿಳೆಯರು ಕೇವಲ ಫಲಾನುಭವಿಗಳಾಗಿ ಉಳಿಯದೆ, ನೈಸರ್ಗಿಕ ಕೃಷಿಯ ಸಂಶೋಧಕರು ಮತ್ತು ತರಬೇತುದಾರರಾಗಿ ಹೊರಹೊಮ್ಮುವ ಮೂಲಕ ಲಕ್ಷ್ಮಿಪುತ್ರಿಯರನ್ನಾಗಿಸುವ (Lakhpati Didis) ಕನಸು ನನಸಾಗುವತ್ತ ಹೆಜ್ಜೆ ಇಡುತ್ತಿದ್ದಾರೆ.

ನೈಸರ್ಗಿಕ ಕೃಷಿ ಯೋಜನೆಯಡಿ 1,980 ಕೃಷಿ ಸಖಿಯರನ್ನು ಗುರುತಿಸಲಾಗಿದ್ದು, ಇವರು ಗ್ರಾಮ ಮಟ್ಟದಲ್ಲಿ ತಾಂತ್ರಿಕ ನೆರವು ಮತ್ತು ತರಬೇತಿ ನೀಡುತ್ತಿದ್ದಾರೆ. ರಾಸಾಯನಿಕ ಗೊಬ್ಬರಗಳ ಮೇಲಿನ ಖರ್ಚು ಕಡಿಮೆ ಮಾಡುವ ಮೂಲಕ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆಯ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸಿ, 'ಲಖ್ಪತಿ ದೀದಿ' ಯೋಜನೆಯನ್ನು ಸಾಕಾರಗೊಳಿಸಲಾಗುತ್ತಿದೆ.

ನೈಸರ್ಗಿಕ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆಯಲು ನಂಬಿಕಸ್ಥ ಪ್ರಮಾಣೀಕರಣ ವ್ಯವಸ್ಥೆಯನ್ನು ರಾಜ್ಯವು ಜಾರಿಗೆ ತರುತ್ತಿದೆ. ಸಣ್ಣ ರೈತರಿಗೆ ಹೊರೆಯಾಗದಂತೆ ಗುಂಪು ಪ್ರಮಾಣೀಕರಣ ಮತ್ತು ಭಾಗಿತ್ವದ ಖಾತರಿ ವ್ಯವಸ್ಥೆಯನ್ನು ಪಿ.ಜಿ.ಎಸ್ ಮಾದರಿಯನ್ನು (Participatory Guarantee System) ಉತ್ತೇಜಿಸಲಾಗುತ್ತಿದೆ.

ರಾಜ್ಯದ ನೈಸರ್ಗಿಕ ಕೃಷಿಕರ ಬೆಳೆಗಳ ಕುರಿತು ಗ್ರಾಹಕರಲ್ಲಿ ವಿಶ್ವಾಸ ಮೂಡಿಸಲು ಡಿಜಿಟಲ್ ಪ್ಲಾಟ್ಫಾರ್ಮ್ಗಳ ಮೂಲಕ ಉತ್ಪನ್ನಗಳ ಮೂಲವನ್ನು ಪತ್ತೆಹಚ್ಚುವ (Traceability) ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ.

ನೈಸರ್ಗಿಕ ಕೃಷಿಯು ಭೂಮಿಯ ಫಲವತ್ತತೆಯನ್ನು ಹೆಚ್ಚಿಸುವುದಲ್ಲದೆ, ವಿಷಮುಕ್ತ ಆಹಾರದ ಮೂಲಕ ಸಾರ್ವಜನಿಕರ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ. ಮಣ್ಣಿನ ಸಾವಯವ ಇಂಗಾಲದ ಹೆಚ್ಚಳ ಮತ್ತು ಅಂತರ್ಜಲ ಸಂರಕ್ಷಣೆಗೆ ಇದು ಪೂರಕವಾಗಿದೆ. ಕರ್ನಾಟಕವು ನೈಸರ್ಗಿಕ ಕೃಷಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮುಂಚೂಣಿಯಲ್ಲಿರಲು ಬದ್ಧವಾಗಿದ್ದು, ಮಹಿಳಾ ನೇತೃತ್ವದ ಈ ಅಭಿಯಾನವು ಸುಸ್ಥಿರ ಅಭಿವೃದ್ಧಿಯ ಮೈಲಿಗಲ್ಲಾಗಲಿದೆ ಎಂದು ಹೇಳಿದರು.

ನೈಸರ್ಗಿಕ ಕೃಷಿ ಎಂದರೇನು?ಕೇಂದ್ರ ಕೃಷಿ ಸಚಿವಾಲಯದ ವ್ಯಾಖ್ಯಾನದ ಪ್ರಕಾರ ನೈಸರ್ಗಿಕ ಕೃಷಿ ಎಂದರೆ "ರಾಸಾಯನಿಕ-ಮುಕ್ತ" ಕೃಷಿ ಪದ್ಧತಿಯಾಗಿದೆ. ಇದು ಕೇವಲ ಜಾನುವಾರು ಮತ್ತು ಸಸ್ಯ ಸಂಪನ್ಮೂಲಗಳನ್ನು ಬಳಸಿಕೊಂಡು ತಯಾರಿಸಿದ ಕೃಷಿ ಗೊಬ್ಬರಗಳನ್ನು ಮಾತ್ರ ಬಳಸುತ್ತದೆ. ಇದು ಪ್ರಕೃತಿಯ ನಿಯಮಗಳನ್ನು ಕೃಷಿ ಪದ್ಧತಿಗಳಿಗೆ ಅನ್ವಯಿಸುವ ವ್ಯವಸ್ಥೆಯಾಗಿದೆ. ಪ್ರತಿ ಕೃಷಿ ಪ್ರದೇಶದ ನೈಸರ್ಗಿಕ ಜೀವವೈವಿಧ್ಯತೆಯೊಂದಿಗೆ ಇದು ಕಾರ್ಯನಿರ್ವಹಿಸುತ್ತದೆ.

ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಎಂದರೇನು?ಕೇಂದ್ರ ಪ್ರಾಯೋಜಿತ ಯೋಜನೆಯಾದ ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಅನ್ನು, ಸಾಂಪ್ರದಾಯಿಕ ಜ್ಞಾನದಲ್ಲಿ ಬೇರೂರಿರುವ ರಾಸಾಯನಿಕ-ಮುಕ್ತ, ಸುಸ್ಥಿರ ಕೃಷಿಯನ್ನು ಉತ್ತೇಜಿಸಲು ಪ್ರಾರಂಭಿಸಲಾಗಿದೆ. ಈ ಯೋಜನೆಯು ರೈತರಿಗೆ ತರಬೇತಿ ನೀಡುವ ಮೂಲಕ, ಆರ್ಥಿಕ ಪ್ರೋತ್ಸಾಹಕಗಳನ್ನು ಒದಗಿಸುವ ಮೂಲಕ ಮತ್ತು ಜೈವಿಕ ಸಂಪನ್ಮೂಲ ಕೇಂದ್ರಗಳಂತಹ ಮೂಲಸೌಕರ್ಯಗಳನ್ನು ಸ್ಥಾಪಿಸುವ ಮೂಲಕ ಮಣ್ಣಿನ ಆರೋಗ್ಯವನ್ನು ಸುಧಾರಿಸುವ, ರೈತರ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡುವ ಮತ್ತು ಹವಾಮಾನ ಸ್ಥಿತಿಸ್ಥಾಪಕ ಪರಿಸರ ವ್ಯವಸ್ಥೆಗಳನ್ನು ರಚಿಸುವ ಗುರಿಯನ್ನು ಹೊಂದಿದೆ. ಅಲ್ಲದೆ, ಇದು ರಾಸಾಯನಿಕ ಗೊಬ್ಬರಗಳು ಮತ್ತು ಕೀಟನಾಶಕಗಳಂತಹ ಬಾಹ್ಯ ರಾಸಾಯನಿಕಗಳನ್ನು ಅವಲಂಬಿಸುವ ಬದಲು, ಸ್ಥಳೀಯ ಸಂಪನ್ಮೂಲಗಳಾದ ನಾಟಿ ಹಸುಗಳ ಸಗಣಿ ಮತ್ತು ಗಂಜಲವನ್ನು ಆಧರಿಸಿದ ವ್ಯವಸ್ಥೆಗೆ ಸಾಂಪ್ರದಾಯಿಕ ಕೃಷಿಯಿಂದ ಬದಲಾವಣೆ ಮಾಡಲು ಪ್ರಯತ್ನಿಸುತ್ತದೆ. ಭಾರತದ ಕೃಷಿ ಪದ್ಧತಿಗಳನ್ನು ಸುಸ್ಥಿರತೆ, ಹವಾಮಾನ ಸ್ಥಿತಿಸ್ಥಾಪಕತ್ವ ಮತ್ತು ಸುರಕ್ಷಿತ ಆಹಾರದ ಕಡೆಗೆ ವೈಜ್ಞಾನಿಕವಾಗಿ ಬೆಂಬಲಿತ ವಿಧಾನಗಳೊಂದಿಗೆ ಬಲಪಡಿಸುವ ದೃಷ್ಟಿಯಿಂದ, ಕೇಂದ್ರ ಸಚಿವ ಸಂಪುಟವು ನವೆಂಬರ್ 25, 2024 ರಂದು ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್‌ಗೆ ಅನುಮೋದನೆ ನೀಡಿದೆ.

ಯೋಜನೆಯ ಪ್ರಮುಖ ಗುರಿಗಳು

  1. ವಿಸ್ತರಣೆ: 7.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ಆರಂಭಿಸುವುದು.
  2. ಕ್ಲಸ್ಟರ್‌ಗಳು: 15,000 ಕ್ಲಸ್ಟರ್‌ಗಳನ್ನು ಸ್ಥಾಪಿಸುವುದು.
  3. ರೈತರಿಗೆ ತಲುಪುವಿಕೆ: 1 ಕೋಟಿ ರೈತರಲ್ಲಿ ನೈಸರ್ಗಿಕ ಕೃಷಿ ಬಗ್ಗೆ ಜಾಗೃತಿ ಮೂಡಿಸುವುದು.
  4. ಜೈವಿಕ ಸಂಪನ್ಮೂಲ ಕೇಂದ್ರಗಳು: 10,000 ಕೇಂದ್ರಗಳನ್ನು ಸ್ಥಾಪಿಸಿ ಸುಲಭವಾಗಿ ಸೌಲಭ್ಯಗಳನ್ನು ಒದಗಿಸುವುದು.
  5. ಬೆಂಬಲ: ಸರಳ ಪ್ರಮಾಣೀಕರಣ ವ್ಯವಸ್ಥೆ ಮತ್ತು ರಾಸಾಯನಿಕ ಮುಕ್ತ ಉತ್ಪನ್ನಗಳಿಗೆ ರಾಷ್ಟ್ರೀಯ ಬ್ರ್ಯಾಂಡ್ ರಚಿಸುವುದು.


ರೈತರಿಗೆ ಹಣಕಾಸಿನ ನೆರವು ಮತ್ತು ಪ್ರಯೋಜನಗಳುರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್‌ ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವ ರೈತರಿಗೆ ಉತ್ಪಾದನೆ-ಆಧಾರಿತ ಆರ್ಥಿಕ ಪ್ರೋತ್ಸಾಹವನ್ನು ನೀಡುತ್ತದೆ.
1. ನೇರ ಆರ್ಥಿಕ ಪ್ರಯೋಜನಗಳು
ಪ್ರೋತ್ಸಾಹಧನ: ನೈಸರ್ಗಿಕ ಕೃಷಿ ಪದ್ಧತಿಗಳನ್ನು ಅನುಸರಿಸಲು ಮತ್ತು ಜಾನುವಾರುಗಳನ್ನು ನಿರ್ವಹಿಸಲು ರೈತರಿಗೆ ಎರಡು ವರ್ಷಗಳವರೆಗೆ ಪ್ರತಿ ವರ್ಷ ಎಕರೆಗೆ 4,000 ರೂ. ಪ್ರೋತ್ಸಾಹಧನ ನೀಡಲಾಗುತ್ತದೆ.
ವೆಚ್ಚ ಕಡಿತ: ರಾಸಾಯನಿಕ ಆಧಾರಿತ ಬಳಕೆಯನ್ನು ಸಂಪೂರ್ಣವಾಗಿ ತೆಗೆದುಹಾಕುವುದರಿಂದ ಕೃಷಿ ವೆಚ್ಚವು ಗಣನೀಯವಾಗಿ ಕಡಿಮೆಯಾಗುತ್ತದೆ.
2. ಕೃಷಿ ಮತ್ತು ಪರಿಸರ ವ್ಯವಸ್ಥೆಯ ಪ್ರಯೋಜನಗಳು
ಮಣ್ಣಿನ ಆರೋಗ್ಯ: ನೈಸರ್ಗಿಕ ಕೃಷಿಯು ಮಣ್ಣಿನ ಜೈವಿಕತೆಯನ್ನು ಹೆಚ್ಚಿಸಿ, ಮಣ್ಣನ್ನು ಆರೋಗ್ಯಕರ ಮತ್ತು ಹೆಚ್ಚು ಸ್ಥಿತಿಸ್ಥಾಪಕವನ್ನಾಗಿ ಮಾಡುತ್ತದೆ.

  • ಆದಾಯ ಹೆಚ್ಚಳ: ಕಡಿಮೆ ವೆಚ್ಚ ಮತ್ತು ಉತ್ತಮ ಇಳುವರಿಯಿಂದಾಗಿ ರೈತರು ಹೆಚ್ಚಿನ ನಿವ್ವಳ ಆದಾಯವನ್ನು ಪಡೆಯುತ್ತಾರೆ.
  • ಹವಾಮಾನ ಸ್ಥಿತಿಸ್ಥಾಪಕತ್ವ: ಜೈವಿಕ ವೈವಿಧ್ಯತೆ ಮತ್ತು ಮಣ್ಣಿನ ಆರೋಗ್ಯ ವೃದ್ಧಿಸುವುದರಿಂದ ಬರಗಾಲ ಮತ್ತು ಪ್ರವಾಹದಂತಹ ತೀವ್ರ ಹವಾಮಾನ ಘಟನೆಗಳನ್ನು ಎದುರಿಸಲು ಕೃಷಿಭೂಮಿ ಹೆಚ್ಚು ಸಮರ್ಥವಾಗುತ್ತದೆ.
  • ಜೈವಿಕ ಸಂಪನ್ಮೂಲ ಕೇಂದ್ರಗಳು: ಜೀವಾಮೃತ ಮತ್ತು ಬೀಜಾಮೃತದಂತಹ ನೈಸರ್ಗಿಕ ಪೋಷಕಾಂಶಗಳನ್ನು ಸುಲಭವಾಗಿ ಲಭ್ಯವಾಗುವಂತೆ ಜೈವಿಕ ಸಂಪನ್ಮೂಲ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.


ರೈತರಿಗೆ ಯೋಜನೆಯ ಪ್ರಯೋಜನಗಳು

  • ನೈಸರ್ಗಿಕ ಕೃಷಿ ಪದ್ಧತಿಗಳು ರೈತರಿಗೆ ಕೃಷಿ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಹೊರಗಿನಿಂದ ಖರೀದಿಸಿದ ಕೃಷಿ ರಸಗೊಬ್ಬರಗಳ ಮೇಲಿನ ಅವಲಂಬನೆಯನ್ನು ತಗ್ಗಿಸಲು ಸಹಾಯ ಮಾಡುತ್ತದೆ.
  • ಇದರ ಜೊತೆಗೆ, ಇದು ಮಣ್ಣಿನ ಆರೋಗ್ಯ, ಫಲವತ್ತತೆ ಮತ್ತು ಗುಣಮಟ್ಟವನ್ನು ಪುನರುಜ್ಜೀವನಗೊಳಿಸುತ್ತದೆ ಮತ್ತು ಜಲಾವೃತ, ಪ್ರವಾಹ, ಬರಗಾಲ ಇತ್ಯಾದಿ ಹವಾಮಾನ ಅಪಾಯಗಳಿಗೆ ಒಗ್ಗಿಕೊಳ್ಳಲು ನೆರವಾಗಲಿದೆ.
  • ಈ ಪದ್ಧತಿಗಳು ರಸಗೊಬ್ಬರಗಳು, ಕೀಟನಾಶಕಗಳು ಇತ್ಯಾದಿಗಳಿಗೆ ಒಡ್ಡಿಕೊಳ್ಳುವುದರಿಂದ ಉಂಟಾಗುವ ಆರೋಗ್ಯದ ಅಪಾಯಗಳನ್ನು ಕಡಿಮೆ ಮಾಡುತ್ತವೆ ಮತ್ತು ರೈತರ ಕುಟುಂಬಕ್ಕೆ ಆರೋಗ್ಯಕರ ಮತ್ತು ಪೌಷ್ಟಿಕ ಆಹಾರವನ್ನು ಒದಗಿಸುತ್ತವೆ.

ಮಿಷನ್‌ನ ಅನುಷ್ಠಾನ ಹೇಗೆ?

  • ನೈಸರ್ಗಿಕ ಕೃಷಿಯು ಜ್ಞಾನ-ಆಧಾರಿತ ಪದ್ಧತಿಯಾಗಿರುವುದರಿಂದ, ಮಿಷನ್ ರೈತರಿಗೆ ನಿರಂತರ ಬೆಂಬಲವನ್ನು ಒದಗಿಸುತ್ತದೆ. ನೈಸರ್ಗಿಕ ಕೃಷಿ ಮಾಡುವ ರೈತರ ಕ್ಷೇತ್ರಗಳಿಂದ ವೈಜ್ಞಾನಿಕವಾಗಿ ಪಡೆದ ಜ್ಞಾನದ ಮೇಲೆ ಮಿಷನ್ ಗಮನಹರಿಸುತ್ತದೆ ಮತ್ತು ನಿರಂತರವಾದ ಪ್ರಾಯೋಗಿಕ ಬೆಂಬಲ ನೀಡುತ್ತದೆ.
  • ತರಬೇತಿ ಮತ್ತು ಪ್ರಾತ್ಯಕ್ಷಿಕೆ: 2,000 ಮಾದರಿ ಪ್ರಾತ್ಯಕ್ಷಿಕೆ ಫಾರ್ಮ್‌ಗಳನ್ನು ಕೃಷಿ ವಿಜ್ಞಾನ ಕೇಂದ್ರಗಳು (KVKs) ಮತ್ತು ಕೃಷಿ ವಿಶ್ವವಿದ್ಯಾಲಯಗಳಲ್ಲಿ ಸ್ಥಾಪಿಸಲಾಗುವುದು. 18.75 ಲಕ್ಷ ರೈತರಿಗೆ ತರಬೇತಿ ನೀಡುವ ಗುರಿಯನ್ನು ಹೊಂದಿದೆ.
  • ಸಮುದಾಯದ ಪಾಲ್ಗೊಳ್ಳುವಿಕೆ: ಜಾಗೃತಿ ಮತ್ತು ಸಹಾಯಕ್ಕಾಗಿ 30,000 ಕೃಷಿ ಸಖಿ/ಸಮುದಾಯ ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಲಾಗುತ್ತದೆ.
  • ಪ್ರಮಾಣೀಕರಣ ಮತ್ತು ಬ್ರ್ಯಾಂಡಿಂಗ್: ರಾಸಾಯನಿಕ ಮುಕ್ತ ಉತ್ಪನ್ನಗಳಿಗೆ ಸರಳವಾದ ಪ್ರಮಾಣೀಕರಣ ಪ್ರಕ್ರಿಯೆ ಮತ್ತು ಏಕೈಕ ರಾಷ್ಟ್ರೀಯ ಬ್ರ್ಯಾಂಡ್ ಅನ್ನು ರಚಿಸುವ ಮೂಲಕ ಮಾರುಕಟ್ಟೆ ಪ್ರವೇಶವನ್ನು ಸುಲಭಗೊಳಿಸಲಾಗುತ್ತದೆ.


ಅರ್ಹತಾ ಮಾನದಂಡಗಳು ಏನು?

  • ಭಾರತದಾದ್ಯಂತ ಇರುವ ಎಲ್ಲಾ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
  • ಸಣ್ಣ, ಅತಿ ಸಣ್ಣ, ಮಧ್ಯಮ ಮತ್ತು ದೊಡ್ಡ ರೈತರು ಸಹ ಭಾಗವಹಿಸಬಹುದು.
  • ನಿರ್ದಿಷ್ಟ ಬೆಂಬಲ ಮತ್ತು ಪ್ರೋತ್ಸಾಹಧನವನ್ನು ಪಡೆಯಲು, ರೈತರು ಗರಿಷ್ಠ ಒಂದು ಎಕರೆ ಪ್ರದೇಶದಲ್ಲಿ ಈ ಪದ್ಧತಿಯನ್ನು ಪ್ರಾರಂಭಿಸಬಹುದು.
  • ಈ ಯೋಜನೆಗೆ ಸೇರಲು ಯಾವುದೇ ನಿರ್ದಿಷ್ಟ ಶೈಕ್ಷಣಿಕ ಅರ್ಹತೆಯ ಅಗತ್ಯವಿರುವುದಿಲ್ಲ.
  • ಸಂಶೋಧನಾ ಸಂಸ್ಥೆಗಳು, ಎನ್‌ಜಿಒಗಳು, ಸಮುದಾಯ ಸಂಘಟನೆಗಳು, ಗ್ರಾಮೀಣ ಕೃಷಿ ಉದ್ಯಮಿಗಳು ಸಹ ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗಿದ್ದಾರೆ.

ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ ಹೇಗೆ?ಯೋಜನೆಯ ಪ್ರಯೋಜನಗಳನ್ನು ಪಡೆಯಲು ರೈತರು ಆಫ್‌ಲೈನ್ ಅಥವಾ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಆಫ್‌ಲೈನ್ ಪ್ರಕ್ರಿಯೆ

  • ಯೋಜನೆಗೆ ನಿಮ್ಮ ಆಸಕ್ತಿಯನ್ನು ವ್ಯಕ್ತಪಡಿಸಲು ನಿಮ್ಮ ಸ್ಥಳೀಯ ಜಿಲ್ಲಾ ಪಂಚಾಯತಿಯ ಅಧಿಕಾರಿಯನ್ನು ಸಂಪರ್ಕಿಸಿ.
  • ಅಧಿಕಾರಿ ನಿಮ್ಮ ವಿವರಗಳನ್ನು ಮತ್ತು ಯೋಜನಾ ವರದಿಯನ್ನು ರಾಜ್ಯ ಕೃಷಿ ಇಲಾಖೆಗೆ ಸಲ್ಲಿಸುತ್ತಾರೆ.
  • ರಾಜ್ಯ ಕೃಷಿ ಇಲಾಖೆ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುತ್ತದೆ.
  • ರಾಜ್ಯದ ಯೋಜನೆಗೆ ಅನುಮೋದನೆ ದೊರೆತು ಹಣ ಬಿಡುಗಡೆಯಾದ ನಂತರ ನಿಮಗೆ ಆರ್ಥಿಕ ನೆರವು ಸಿಗುತ್ತದೆ.

ಆನ್‌ಲೈನ್ ಪ್ರಕ್ರಿಯೆ

  • ರಾಷ್ಟ್ರೀಯ ನೈಸರ್ಗಿಕ ಕೃಷಿ ವೆಬ್‌ಸೈಟ್‌ನ ನೋಂದಣಿ ಪುಟ naturalfarming.dac.gov.in ಕ್ಕೆ ಭೇಟಿ ನೀಡಿ.
  • ವೈಯಕ್ತಿಕ ಮತ್ತು ಕೃಷಿ ವಿವರಗಳೊಂದಿಗೆ ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ನಿಮ್ಮ ಮಾಹಿತಿಯನ್ನು ಪರಿಶೀಲಿಸಿ ಮತ್ತು ಅದನ್ನು ಸಲ್ಲಿಸಿ.

ಅಗತ್ಯ ದಾಖಲೆಗಳು

  • ಆಧಾರ್ ಸಂಖ್ಯೆ
  • ಭೂಮಿ ದಾಖಲೆಗಳು
  • ಬ್ಯಾಂಕ್ ವಿವರಗಳು
  • ಛಾಯಾಚಿತ್ರಗಳು
  • ಜಾತಿ ಪ್ರಮಾಣಪತ್ರ (ಎಸ್ಸಿ/ಎಸ್ಟಿ ಅರ್ಜಿದಾರರಿಗೆ ಮಾತ್ರ)

]]>
Thu, 22 Jan 2026 08:36:23 +0530 shivuagrico
Pradan mantri awas yojane 2026&ಜನೇವರಿ 24 ರಂದು 42,345 ಮನೆ ಹಂಚಿಕೆ,ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ https://krushirushi.in/Pradan-mantri-awas-yojane-2026 https://krushirushi.in/Pradan-mantri-awas-yojane-2026 Pradan mantri awas yojane 2026-ಜನೇವರಿ 24 ರಂದು 42,345 ಮನೆ ಹಂಚಿಕೆ,ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಆರ್ಥಿಕವಾಗಿ ಹಿಂದುಳಿದ ಮತ್ತು ಮಧ್ಯಮ ವರ್ಗದ ಜನರ ಸ್ವಂತ ಮನೆಯ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಅಡಿಯಲ್ಲಿ ನಿರ್ಮಿಸಲಾದ 42,345 ಮನೆಗಳ ಲೋಕಾರ್ಪಣೆ ಮತ್ತು ಹಕ್ಕುಪತ್ರ ವಿತರಣಾ ಸಮಾರಂಭವು ಜನೆವರಿ 24, 2026 ರಂದು ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮತ್ತು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ನೇತೃತ್ವದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಈ ಕಾರ್ಯಕ್ರಮದ ವಿವರಗಳನ್ನು ಹಂಚಿಕೊಳ್ಳಲಾಗಿದೆ.

ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಹೇಗೆ?

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಜಾರಿಯಾಗುತ್ತಿರುವ ಈ ವಸತಿ ಯೋಜನೆಯು ರಾಜ್ಯದ ಆರ್ಥಿಕವಾಗಿ ಹಿಂದುಳಿದ ಮತ್ತು ಕಡಿಮೆ ಆದಾಯದ ಗುಂಪುಗಳಿಗೆ ಕೈಗೆಟುಕುವ ದರದಲ್ಲಿ ಸುಸಜ್ಜಿತ ಮನೆಗಳನ್ನು ಒದಗಿಸುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಈ ಯೋಜನೆಯಡಿ ಪ್ರತಿ ಮನೆಗೆ ಸುಮಾರು 7.50 ರೂ. ಲಕ್ಷ ವೆಚ್ಚವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ 2.70 ಲಕ್ಷ ರೂ.ದಿಂದ 3.50 ಲಕ್ಷ ರೂ.ವರೆಗೆ ಭಾರಿ ಸಹಾಯಧನ ನೀಡುತ್ತಿವೆ, ಇದರಿಂದಾಗಿ ಫಲಾನುಭವಿಗಳು ಕೇವಲ 1 ಲಕ್ಷ ರೂ. ರಷ್ಟು ಕಡಿಮೆ ವಂತಿಗೆಯನ್ನು ಪಾವತಿಸಿ ಸ್ವಂತ ಮನೆಯ ಮಾಲೀಕರಾಗಬಹುದು. ಕೇವಲ ತಲೆಗೊಂದು ಸೂರಿಲ್ಲದೆ, ಈ ವಸತಿ ಸಂಕೀರ್ಣಗಳಲ್ಲಿ ಆಸ್ಪತ್ರೆ, ಗ್ರಂಥಾಲಯ ಹಾಗೂ ಸಮುದಾಯ ಭವನಗಳಂತಹ ಆಧುನಿಕ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದ್ದು, ಸಾಮಾಜಿಕ ನ್ಯಾಯದಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಕಾರ್ಯಕ್ರಮದ ಪ್ರಮುಖ ವಿವರಗಳು:

  • ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾದ ಮನೆಗಳ ವಿತರಣಾ ಸಮಾರಂಭವು 2026ರ ಜನೆವರಿ 24ರಂದು ಬೆಳಿಗ್ಗೆ 11:00 ಗಂಟೆಗೆ ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಜರುಗಲಿದೆ.
  • ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಸಚಿವ ಸಂಪುಟದ ಪ್ರಮುಖ ಸದಸ್ಯರು ಭಾಗವಹಿಸಲಿದ್ದಾರೆ.
  • ಸಮಾರಂಭದ ವೇದಿಕೆಯಲ್ಲಿ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಆಯ್ದ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಮನೆಗಳನ್ನು ಹಸ್ತಾಂತರಿಸಲಾಗುವುದು.
  • ವಿಶೇಷವೆಂದರೆ, ಇದೇ ಸಂದರ್ಭದಲ್ಲಿ ರಾಜ್ಯದ ಒಟ್ಟು 28 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಮನೆಗಳ ಹಂಚಿಕೆ ಪ್ರಕ್ರಿಯೆಯು ವ್ಯವಸ್ಥಿತವಾಗಿ ನಡೆಯಲಿದೆ.

ಮನೆ ಹಂಚಿಕೆಯ ವಿವರಗಳು

  • ಪ್ರಸ್ತುತ ಜಾರಿಯಲ್ಲಿರುವ ಈ ಯೋಜನೆಯು ಎರಡನೇ ಹಂತದ ಮನೆ ವಿತರಣೆಯಾಗಿದ್ದು, ಇದರಲ್ಲಿ ಸಾಮಾಜಿಕ ನ್ಯಾಯದ ತತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
  • ಈ ಹಂತದಲ್ಲಿ ರಾಜ್ಯಾದ್ಯಂತ ಒಟ್ಟು 42,345 ಮನೆಗಳನ್ನು ವಿತರಿಸಲಾಗುತ್ತಿದ್ದು, ಅದರಲ್ಲಿ 20,312 ಮನೆಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (SC/ST) ಫಲಾನುಭವಿಗಳಿಗೆ ಮೀಸಲಿಡಲಾಗಿದೆ.
  • ಇನ್ನುಳಿದ 22,033 ಮನೆಗಳನ್ನು ಇತರ ವರ್ಗದ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುತ್ತಿದೆ.
  • ವಿಶೇಷವಾಗಿ ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಒಟ್ಟು 2,169 ಮನೆಗಳು ಮಂಜೂರಾಗಿದ್ದು, ಸಮಾರಂಭದ ವೇಳೆ ಸುಮಾರು 3,000 ಫಲಾನುಭವಿಗಳಿಗೆ ಅಧಿಕೃತವಾಗಿ ಹಕ್ಕುಪತ್ರಗಳನ್ನು ವಿತರಿಸಲಾಗುವುದು.

ಮನೆಯ ನಿರ್ಮಾಣಕ್ಕೆ ಸಿಗುವ ಸಬ್ಸಿಡಿ ಎಷ್ಟು?

  • ಈ ಯೋಜನೆಯಡಿ ನಿರ್ಮಿಸಲಾದ ಪ್ರತಿ ಮನೆಯ ಒಟ್ಟು ವೆಚ್ಚ ಅಂದಾಜು 7.50 ಲಕ್ಷ ರೂ. ಆಗಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಾರಿ ಪ್ರಮಾಣದ ಸಹಾಯಧನವನ್ನು ನೀಡುತ್ತಿವೆ.
  • ಇದರಲ್ಲಿ ಕೇಂದ್ರ ಸರ್ಕಾರವು 1.50 ಲಕ್ಷ ರೂ. ಪಾಲು ನೀಡಿದರೆ, ರಾಜ್ಯ ಸರ್ಕಾರವು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ 1.20 ಲಕ್ಷ ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 2 ಲಕ್ಷ ರೂ. ಸಹಾಯಧನವನ್ನು ಒದಗಿಸುತ್ತಿದೆ.
  • ಉಳಿದ ವೆಚ್ಚದಲ್ಲಿ ಫಲಾನುಭವಿಗಳು ಕೇವಲ 1 ಲಕ್ಷ ರೂ.ಪಾವತಿಸುವ ಮೂಲಕ ಸುಸಜ್ಜಿತ ಮನೆಯ ಮಾಲೀಕರಾಗಬಹುದಾಗಿದೆ. ವಿಶೇಷವೆಂದರೆ, ಈ ವಸತಿ ಸಂಕೀರ್ಣಗಳು ಕೇವಲ ಮನೆಗಳಿಗೆ ಸೀಮಿತವಾಗದೆ, ಅಲ್ಲಿನ ನಿವಾಸಿಗಳ ಅನುಕೂಲಕ್ಕಾಗಿ ಆಸ್ಪತ್ರೆ, ಗ್ರಂಥಾಲಯ ಹಾಗೂ ಸಮುದಾಯ ಭವನಗಳಂತಹ ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒಳಗೊಂಡಿವೆ.

ರಾಜ್ಯದಲ್ಲಿ ಆವಾಸ್‌ ಮನೆ ನಿರ್ಮಾಣ ಯೋಜನೆಯ ಪ್ರಗತಿ

  • ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ಮಾಹಿತಿಯಂತೆ, ರಾಜ್ಯಾದ್ಯಂತ ಈ ಯೋಜನೆಯಡಿ ಒಟ್ಟು 1,80,253 ಮನೆಗಳು ಮಂಜೂರಾಗಿವೆ.
  • ಈ ಪೈಕಿ ಈಗಾಗಲೇ 86,651 ಮನೆಗಳ ನಿರ್ಮಾಣ ಕಾರ್ಯ ಸಂಪೂರ್ಣಗೊಂಡು ಹಸ್ತಾಂತರಕ್ಕೆ ಸಿದ್ಧವಾಗಿವೆ. ಪ್ರಸ್ತುತ ರಾಜ್ಯದ ವಿವಿಧೆಡೆ ಒಟ್ಟು 1,29,986 ಮನೆಗಳ ನಿರ್ಮಾಣ ಕಾರ್ಯವು ವಿವಿಧ ಹಂತಗಳಲ್ಲಿ ಅತ್ಯಂತ ವೇಗವಾಗಿ ಪ್ರಗತಿಯಲ್ಲಿದೆ.
  • ಮುಂದಿನ ಮೂರನೇ ಹಂತದಲ್ಲಿ ಅಂದರೆ 2026ರ ಏಪ್ರಿಲ್ ಅಥವಾ ಮೇ ತಿಂಗಳ ವೇಳೆಗೆ ಇನ್ನೂ ಹೆಚ್ಚುವರಿಯಾಗಿ 30,000 ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸುವ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ.

ಫಲಾನುಭವಿಗಳ ಪಟ್ಟಿ ಪರಿಶೀಲಿಸುವುದು ಹೇಗೆ?

  • ಫಲಾನುಭವಿಗಳು ಮೊದಲಿಗೆ ರಾಜೀವ್ ಗಾಂಧಿ ವಸತಿ ನಿಗಮದ (RGRHCL) ಅಧಿಕೃತ ವೆಬ್‌ಸೈಟ್ ಆದ ashraya.karnataka.gov.in/ ಗೆ ಭೇಟಿ ನೀಡಬೇಕು.
  • ವೆಬ್‌ಸೈಟ್ ತೆರೆದ ನಂತರ, ಮುಖಪುಟದಲ್ಲಿ ಕಾಣಿಸುವ 'Beneficiary Information' (ಫಲಾನುಭವಿ ಮಾಹಿತಿ) ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.

  • ನಂತರ ಅಲ್ಲಿ ಕಾಣಿಸುವ ಆಯ್ಕೆಗಳಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ದುಕೊಂಡು, ನಿಮ್ಮ ಅರ್ಜಿಯ ಅಕ್ನಾಲೆಜ್‌ಮೆಂಟ್ ಸಂಖ್ಯೆಯನ್ನು ನಮೂದಿಸಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ

  • ಒಂದು ವೇಳೆ ನಿಮಗೆ ಆನ್‌ಲೈನ್‌ನಲ್ಲಿ ಪರಿಶೀಲಿಸಲು ಸಾಧ್ಯವಾಗದಿದ್ದರೆ ಅಥವಾ ಹೆಚ್ಚಿನ ಮಾಹಿತಿ ಅಗತ್ಯವಿದ್ದರೆ, ಸರ್ಕಾರದ ಸಹಾಯವಾಣಿ ಸಂಖ್ಯೆಗಳಾದ 080-22106888 ಅಥವಾ 080-23118888 ಕ್ಕೆ ಕರೆ ಮಾಡಿ ವಿವರಗಳನ್ನು ಪಡೆಯಬಹುದು.
]]>
Wed, 21 Jan 2026 17:31:32 +0530 shivuagrico
New ration card 2026&ವೈದ್ಯಕೀಯ ತುರ್ತು ಚಿಕಿತ್ಸೆಗಾಗಿ 7 ದಿನದೊಳಗೆ ಸಿಗಲಿದೆ ಹೊಸ ಬಿಪಿಎಲ್‌ ಕಾರ್ಡ್ https://krushirushi.in/New-ration-card-2026 https://krushirushi.in/New-ration-card-2026 New ration card 2026-ವೈದ್ಯಕೀಯ ತುರ್ತು ಚಿಕಿತ್ಸೆಗಾಗಿ 7 ದಿನದೊಳಗೆ ಸಿಗಲಿದೆ ಹೊಸ ಬಿಪಿಎಲ್‌ ಕಾರ್ಡ್


ಬಿಪಿಎಲ್‌ ಕಾರ್ಡ್‌ ಹೊಂದಿದವರು ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ರಿಯಾಯಿತಿ ದರದಲ್ಲಿ ನಾನಾ ಪರೀಕ್ಷೆ, ಚಿಕಿತ್ಸೆ ಸೌಲಭ್ಯ ಪಡೆಯುವುದಕ್ಕೆ ಸರಕಾರ ಎಂದೋ ಅವಕಾಶ ಕಲ್ಪಿಸಿದೆ. ಆದರೆ, ರಾಜ್ಯದ ಅನೇಕ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರೂ ಇದುವರೆಗೆ ಬಿಪಿಎಲ್‌ ಕಾರ್ಡ್‌ ಪಡೆಯಲು ಸಾಧ್ಯವಾಗಿಲ್ಲ. ಇಂತಹ ಕುಟುಂಬಗಳಿಗೆ ವೈದ್ಯಕೀಯ ತುರ್ತು ಚಿಕಿತ್ಸೆಯ ಅಗತ್ಯ ಬಿದ್ದಾಗ ಬಿಪಿಎಲ್ ಕಾರ್ಡ್‌ ಇಲ್ಲ ಎಂಬ ಕಾರಣಕ್ಕೆ ಚಿಕಿತ್ಸೆಯ ನಾನಾ ಸವಲತ್ತುಗಳು ದೊರೆಯದಂತಾಗಿತ್ತು

ಇದನ್ನು ತಪ್ಪಿಸಲೆಂದೇ ಸರಕಾರ ಇತ್ತೀಚೆಗೆ ವೈದ್ಯಕೀಯ ತುರ್ತು ಘಟಕದ ಸಾಫ್ಟ್‌ವೇರ್‌ ಸಿದ್ಧಪಡಿಸಿದೆ. ವೈದ್ಯಕೀಯ ಸೌಲಭ್ಯಕ್ಕಾಗಿ ಕರ್ನಾಟಕ ಒನ್‌, ಗ್ರಾಮ ಒನ್‌ಗಳ ಮೂಲಕ ಕಾರ್ಡ್‌ ನೀಡಲಾಗುತ್ತಿದೆ. ಆಧಾರ್‌ ಕಾರ್ಡ್‌, ಆದಾಯ ಪ್ರಮಾಣ ಪತ್ರ ಮತ್ತು ವೈದ್ಯಕೀಯ ದಾಖಲೆಗಳನ್ನು ವೈದ್ಯಕೀಯ ತುರ್ತು ಘಟಕಕ್ಕೆ ಸಲ್ಲಿಸಿ ಏಳು ದಿನದೊಳಗೆ ಬಿಪಿಎಲ್‌ ಕಾರ್ಡ್‌ ಪಡೆಯಲು ದಾರಿ ಮಾಡಿಕೊಟ್ಟಿದೆ.


ಮತ್ತೊಂದೆಡೆ ಸುಳ್ಳು ದಾಖಲೆಗಳನ್ನು ಒದಗಿಸುತ್ತಿರುವ ಹಿನ್ನೆಲೆ ಅರ್ಜಿ ತಿರಸ್ಕೃತಗೊಳ್ಳುವುದು ಬೆಳಕಿಗೆ ಬರುತ್ತಿವೆ. ಇಂತಹ ಪ್ರಕರಣಗಳು ರಾಜ್ಯಾದ್ಯಂತ ಕಂಡುಬಂದಿದ್ದು, ವಾಮಮಾರ್ಗದ ಮೂಲಕ ಕಾರ್ಡ್‌ ಪಡೆಯಲು ಯತ್ನಿಸಿ ವಿಫಲವಾಗುತ್ತಿರುವುದು ಆಹಾರ ನಿರೀಕ್ಷಕರ ಪರಿಶೀಲನೆ ಸಂದರ್ಭ ಬೆಳಕಿಗೆ ಬರುತ್ತಿವೆ.


ಅರ್ಜಿ ಸಲ್ಲಿಕೆ ವಿವರ

ರಾಜ್ಯಾದ್ಯಂತ ಮೆಡಿಕಲ್‌ ಎಮರ್ಜೆನ್ಸಿ ಮಾಡ್ಯುಲ್‌ ಮೂಲಕ ಬಿಪಿಎಲ್‌ ಕಾರ್ಡ್‌ ಪಡೆಯಲು ಅವಕಾಶ ದೊರೆತ ದಿನದಿಂದ ರಾಜ್ಯಾದ್ಯಂತ 5,677 ಅರ್ಜಿಗಳು ಫಲಾನುಭವಿಗಳಿಂದ ಸಲ್ಲಿಕೆಯಾಗಿದ್ದು, ಅರ್ಜಿ ಹಾಕಿದ ಬೆನ್ನಲ್ಲೇ 203 ಜನ ಹಿಂಪಡೆದಿದ್ದಾರೆ. ಈ ಅವಕಾಶದಡಿ ಬಿಪಿಎಲ್‌ ಕಾರ್ಡ್‌ ಕೋರಿ ಅರ್ಜಿ ಹಾಕಿದ 2327 ಅರ್ಜಿದಾರರ ಸ್ಥಳ ತಪಾಸಣೆ ಮಾಡಿದ್ದು, 906 ಅರ್ಜಿಗಳು ಅಧಿಕೃತವಾಗಿ ಅನುಮೋದನೆಗೊಂಡಿವೆ. ಇದೇ ವೇಳೆ ಸುಳ್ಳು, ಅಸ್ಪಷ್ಟ ದಾಖಲೆ ಒದಗಿಸಿದ ಕಾರಣಕ್ಕೆ 706 ಅರ್ಜಿಗಳು ತಿರಸ್ಕೃತಗೊಳ್ಳುವಂತಾಗಿದೆ. ಹಾಗಾಗಿ, ರಾಜ್ಯಾದ್ಯಂತ ಇವತ್ತಿನವರೆಗೆ ಇನ್ನೂ 4065 ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್‌ ಕೊಡುವ ಕಾರ್ಯ ಬಾಕಿ ಇದೆ.

ಮಧ್ಯವರ್ತಿಗಳ ಹಾವಳಿ

ಸದುದ್ದೇಶಕ್ಕಾಗಿ ಆರಂಭಿಸಿದ ಮೆಡಿಕಲ್‌ ಎಮರ್ಜೆನ್ಸಿ ಮಾಡ್ಯೂಲ್‌, ಅರ್ಹರಿಂದ ಸಮರ್ಪಕ ಬಳಕೆಯಾಗುತ್ತಿಲ್ಲಎಂಬ ದೂರುಗಳು ಕೇಳಿಬಂದಿರುವುದು ಒಂದೆಡೆಯಾದರೆ ಮಧ್ಯವರ್ತಿಗಳು ಫಲಾನುಭವಿಗಳನ್ನು ದಾರಿ ತಪ್ಪಿಸಿ ಸುಳ್ಳು ದಾಖಲೆ ಸಲ್ಲಿಸುತ್ತಿರುವುದು ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಇದರಿಂದ ಪ್ರತಿ ಅರ್ಜಿಯೊಂದಿಗೆ ಲಗತ್ತಿಸಿದ ಆಧಾರ್‌ ಕಾರ್ಡ್‌, ಆದಾಯ ಪ್ರಮಾಣಪತ್ರದ ಜತೆಗೆ ಮುಖ್ಯವಾಗಿ ವೈದ್ಯಕೀಯ ದಾಖಲೆಗಳನ್ನು ಕೂಲಂಕಷವಾಗಿ ತಪಾಸಣೆ ಮಾಡುವಂತಾಗಿದೆ.

]]>
Wed, 21 Jan 2026 08:03:45 +0530 shivuagrico
Pumpset akrama sakaram&ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ:ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್ https://krushirushi.in/Pumpset-akrama-sakarama-2399 https://krushirushi.in/Pumpset-akrama-sakarama-2399 Pumpset akrama sakaram-ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ:ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್

ರೈತರು ತಮ್ಮ ಹೊಲಗಳಿಗೆ ನೀರು ಹರಿಸುವ ಉದ್ದೇಶದಿಂದ ತರಾತುರಿಯಲ್ಲಿ ಪಂಪ್‌ಸೆಟ್‌ಗಳನ್ನು ಹಾಕಿಸಿಕೊಂಡು ಅವುಗಳನ್ನು ಬಳಕೆ ಮಾಡುತ್ತಿದ್ದಾರೆ. ಅದರೆ, ಕಾನೂನಿನ ಪ್ರಕಾರ ಹೀಗೆ ಮಾಡುವುದು ಅಕ್ರಮ. ಆದರೆ, ರೈತರ ಹಿತದೃಷ್ಟಿಯನ್ನು ಮನದಲ್ಲಿ ಇಟ್ಟುಕೊಂಡು ಅಕ್ರಮ ಪಂಪ್‌ಸೆಟ್‌ಗಳನ್ನು ಊರ್ಜಿತಗೊಳಿಸಲು ಸರ್ಕಾರ ಮುಂದಾಗಿದೆ. ಕರ್ನಾಟಕದ ರೈತರಿಗೆ ಕೃಷಿ ಪಂಪ್‌ಸೆಟ್‌ಗಳ ಅಕ್ರಮ ಸಂಪರ್ಕವನ್ನು ಸಕ್ರಮಗೊಳಿಸಲು ಸರ್ಕಾರವು 'ಅಕ್ರಮ-ಸಕ್ರಮ' ಯೋಜನೆಯನ್ನು ಮತ್ತೆ ಚುರುಕುಗೊಳಿಸಿದೆ. ಈ ಯೋಜನೆಯ ಮೂಲಕ ಅನಧಿಕೃತವಾಗಿ ವಿದ್ಯುತ್ ಬಳಸುತ್ತಿದ್ದ ಲಕ್ಷಾಂತರ ರೈತರಿಗೆ ಕಾನೂನುಬದ್ಧ ಸಂಪರ್ಕ ಕಲ್ಪಿಸಿ, ಸುಸ್ಥಿರ ಕೃಷಿಗೆ ದಾರಿಯ ಮಾಡಿಕೊಡಲಾಗುತ್ತಿದೆ. ಈ ಯೋಜನೆಯ ಸ್ಥಿತಿಗತಿ, ಪ್ರಕ್ರಿಯೆ ಮತ್ತು ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಏನಿದು ಪಂಪ್‌ಸೆಟ್‌ ಅಕ್ರಮ-ಸಕ್ರಮ ಯೋಜನೆ?

ಕರ್ನಾಟಕ ಸರ್ಕಾರದ 'ಪಂಪ್‌ಸೆಟ್‌ ಅಕ್ರಮ-ಸಕ್ರಮ' ಯೋಜನೆಯು ಅನುಮತಿ ಪಡೆಯದೆ ಅನಧಿಕೃತವಾಗಿ ಬಳಸುತ್ತಿದ್ದ ಕೃಷಿ ಪಂಪ್‌ಸೆಟ್‌ಗಳಿಗೆ ಕಾನೂನುಬದ್ಧ ವಿದ್ಯುತ್ ಸಂಪರ್ಕ ಕಲ್ಪಿಸುವ ಮಹತ್ವಾಕಾಂಕ್ಷೆಯ ಉಪಕ್ರಮವಾಗಿದೆ. ಈ ಯೋಜನೆಯಡಿ, ವಿದ್ಯುತ್ ಜಾಲದಿಂದ 500 ಮೀಟರ್ ಒಳಗಿರುವ ಪಂಪ್‌ಸೆಟ್‌ಗಳನ್ನು ನಿಗದಿಪಡಿಸಿದ ಶುಲ್ಕದೊಂದಿಗೆ (ಸುಮಾರು 10,000 ರೂ.) ಸಕ್ರಮಗೊಳಿಸಿ ಅಧಿಕೃತ RR ಸಂಖ್ಯೆ ನೀಡಲಾಗುತ್ತದೆ. ಇನ್ನು 500 ಮೀಟರ್‌ಗಿಂತ ದೂರವಿರುವ ಪಂಪ್‌ಸೆಟ್‌ಗಳಿಗೆ ಕುಸುಮ್-ಸಿ ಯೋಜನೆಯಡಿ ಶೇ. 80ರಷ್ಟು ಸರ್ಕಾರಿ ಸಹಾಯಧನದೊಂದಿಗೆ ಸೌರಶಕ್ತಿ ಪಂಪ್‌ಸೆಟ್‌ಗಳನ್ನು ಅಳವಡಿಸಿಕೊಳ್ಳಲು ಉತ್ತೇಜಿಸಲಾಗುತ್ತದೆ. ಈ ಮೂಲಕ ರೈತರಿಗೆ ಹಗಲು ವೇಳೆ ನಿರಂತರ 7 ಗಂಟೆಗಳ ಕಾಲ ಉಚಿತ ವಿದ್ಯುತ್ ಒದಗಿಸುವುದು, ಸುಟ್ಟುಹೋದ ಟ್ರಾನ್ಸ್‌ಫಾರ್ಮರ್‌ಗಳ ಉಚಿತ ದುರಸ್ತಿ ಮತ್ತು ಅಕ್ರಮ ಸಂಪರ್ಕದ ದಂಡದಿಂದ ಮುಕ್ತಿ ದೊರೆಯಲಿದೆ.

 

ಯೋಜನೆಯ ಉದ್ದೇಶವೇನು?

ಕರ್ನಾಟಕದ ವಿವಿಧ ವಿದ್ಯುತ್ ವಿತರಣಾ ಕಂಪನಿಗಳ ವ್ಯಾಪ್ತಿಯಲ್ಲಿ ರೈತರು ಅನಿವಾರ್ಯ ಕಾರಣಗಳಿಂದ ಅನುಮತಿ ಪಡೆಯದೆ ಪಂಪ್‌ಸೆಟ್‌ಗಳನ್ನು ಅಳವಡಿಸಿಕೊಂಡಿದ್ದರು. ಇಂತಹ ಅಕ್ರಮ ಸಂಪರ್ಕಗಳಿಂದಾಗಿ ವಿದ್ಯುತ್ ಜಾಲದ ಮೇಲೆ ಒತ್ತಡ ಉಂಟಾಗುತ್ತಿತ್ತು ಮತ್ತು ರೈತರಿಗೆ ಸರ್ಕಾರಿ ಸೌಲಭ್ಯಗಳು ಸಿಗುತ್ತಿರಲಿಲ್ಲ. ಇದನ್ನು ಸರಿಪಡಿಸಲು ಅಕ್ರಮ-ಸಕ್ರಮ ಯೋಜನೆಯನ್ನು ಜಾರಿಗೆ ತರಲಾಗಿದೆ.

ಯೋಜನೆಯ ಪ್ರಸ್ತುತ ಸ್ಥಿತಿ ಏನು?

  • ಈ ಯೋಜನೆಯು ಆರಂಭವಾದ ಸಮಯದಲ್ಲಿ ರಾಜ್ಯಾದ್ಯಂತ ಸುಮಾರು 4.5 ಲಕ್ಷ ಪಂಪ್‌ಸೆಟ್ ಸಕ್ರಮಕ್ಕಾಗಿ ಅರ್ಜಿಗಳು ಬಾಕಿ ಇದ್ದವು.
  • ಸರ್ಕಾರದ ನಿರಂತರ ಪ್ರಯತ್ನದಿಂದಾಗಿ ಈಗಾಗಲೇ 3 ಲಕ್ಷಕ್ಕೂ ಹೆಚ್ಚು ಪಂಪ್‌ಸೆಟ್‌ಗಳನ್ನು ಯಶಸ್ವಿಯಾಗಿ ಸಕ್ರಮಗೊಳಿಸಿ, ಅವುಗಳಿಗೆ ಅಧಿಕೃತ ವಿದ್ಯುತ್ ಸಂಪರ್ಕ ನೀಡಲಾಗಿದೆ.
  • ಉಳಿದಿರುವ ಸುಮಾರು 1.5 ರಿಂದ 2 ಲಕ್ಷ ಪಂಪ್‌ಸೆಟ್‌ಗಳಿಗೆ ಕಾನೂನುಬದ್ಧವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವ ಪ್ರಕ್ರಿಯೆಯು ಪ್ರಸ್ತುತ ಜಾರಿಯಲ್ಲಿದೆ.
  • ಮುಂದಿನ ಒಂದು ವರ್ಷದ ಅವಧಿಯೊಳಗೆ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಿ, ಪ್ರತಿಯೊಬ್ಬ ಅರ್ಹ ರೈತರಿಗೂ ಅಧಿಕೃತ RR ಸಂಖ್ಯೆ ನೀಡಬೇಕೆಂಬ ಗುರಿಯನ್ನು ಇಂಧನ ಇಲಾಖೆ ಹಾಕಿಕೊಂಡಿದೆ.

ಅರ್ಹತಾ ಮಾನದಂಡಗಳು ಏನು?

  • ಒಂದು ವೇಳೆ ರೈತರ ಪಂಪ್‌ಸೆಟ್ ಹತ್ತಿರದ ಟ್ರಾನ್ಸ್‌ಫಾರ್ಮರ್‌ನಿಂದ 500 ಮೀಟರ್ ಒಳಗಿದ್ದರೆ, ಅಸ್ತಿತ್ವದಲ್ಲಿರುವ ವಿದ್ಯುತ್ ಜಾಲದ ಮೂಲಕವೇ ನೇರವಾಗಿ ಸಂಪರ್ಕವನ್ನು ಸಕ್ರಮಗೊಳಿಸಲಾಗುತ್ತದೆ.
  • ಈ ವ್ಯಾಪ್ತಿಯಲ್ಲಿರುವ ರೈತರಿಗೆ ವಿದ್ಯುತ್‌ ವಿತರಣಾ ಸಂಸ್ಥೆಗಳ ಮೂಲಸೌಕರ್ಯಗಳನ್ನು ಒದಗಿಸಿ, ಅಧಿಕೃತ ವಿದ್ಯುತ್ ಸಂಪರ್ಕವನ್ನು ಕಲ್ಪಿಸಿಕೊಡುತ್ತವೆ.
  • ಟ್ರಾನ್ಸ್‌ಫಾರ್ಮರ್‌ನಿಂದ 500 ಮೀಟರ್‌ಗಿಂತ ಹೆಚ್ಚಿನ ದೂರದಲ್ಲಿರುವ ಪಂಪ್‌ಸೆಟ್‌ಗಳಿಗೆ ಸಾಂಪ್ರದಾಯಿಕ ವಿದ್ಯುತ್ ಕಂಬಗಳ ಮೂಲಕ ಸಂಪರ್ಕ ನೀಡುವುದು ತಾಂತ್ರಿಕವಾಗಿ ಮತ್ತು ಆರ್ಥಿಕವಾಗಿ ಕಷ್ಟಸಾಧ್ಯವಾಗಿರುತ್ತದೆ.
  • ಇಂತಹ ಸಂದರ್ಭಗಳಲ್ಲಿ ಸರ್ಕಾರವು ರೈತರಿಗೆ ಸಾಂಪ್ರದಾಯಿಕ ವಿದ್ಯುತ್‌ಗೆ ಕಾಯುವ ಬದಲು, ಸೌರಶಕ್ತಿ ಚಾಲಿತ ಪಂಪ್‌ಸೆಟ್‌ಗಳನ್ನು ಅಳವಡಿಸಿಕೊಳ್ಳಲು ಹೆಚ್ಚಿನ ಉತ್ತೇಜನ ನೀಡುತ್ತಿದೆ.

ಕುಸುಮ್-ಸಿ ಯೋಜನೆಯಡಿ ಪ್ರಯೋಜನಗಳು

  • ರೈತರು ರಾತ್ರಿ ಸಮಯದಲ್ಲಿ ಹಾವು-ಚೇಳುಗಳ ಭಯದಲ್ಲಿ ಅಥವಾ ಚಳಿಯಲ್ಲಿ ಹೊಲಕ್ಕೆ ಹೋಗುವ ಸಂಕಷ್ಟವನ್ನು ತಪ್ಪಿಸಲು, ಈ ಯೋಜನೆಯಡಿ ಹಗಲಿನಲ್ಲೇ ನಿರಂತರವಾಗಿ 7 ಗಂಟೆಗಳ ಕಾಲ ವಿದ್ಯುತ್ ಪೂರೈಸಲು ಸರ್ಕಾರ ಕ್ರಮ ಕೈಗೊಂಡಿದೆ.
  • ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ನೀಡುವ ಫೀಡರ್‌ಗಳನ್ನು ಸೌರಶಕ್ತಿಯ ಮೂಲಕ ಆಧುನೀಕರಿಸಲಾಗುತ್ತಿದೆ. ಇದರಿಂದಾಗಿ ವಿದ್ಯುತ್ ಜಾಲದ ಮೇಲಿನ ಒತ್ತಡ ಕಡಿಮೆಯಾಗಿ, ರೈತರಿಗೆ ಗುಣಮಟ್ಟದ ವಿದ್ಯುತ್ ಲಭ್ಯವಾಗುತ್ತದೆ.
  • ಸೌರ ಪಂಪ್‌ಸೆಟ್‌ಗಳನ್ನು ಅಳವಡಿಸಿಕೊಳ್ಳುವ ರೈತರಿಗೆ ಆರ್ಥಿಕ ಹೊರೆಯಾಗದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಒಟ್ಟು ವೆಚ್ಚದ ಶೇ. 80 ರಷ್ಟು ಸಹಾಯಧನವನ್ನು ನೀಡುತ್ತಿವೆ.
  • ಈ ಯೋಜನೆಯಡಿ ರೈತರು ಪಂಪ್‌ಸೆಟ್‌ನ ಒಟ್ಟು ಮೊತ್ತದಲ್ಲಿ ಕೇವಲ ಶೇ. 20 ರಷ್ಟು ಅಲ್ಪ ಮೊತ್ತವನ್ನು ಮಾತ್ರ ಪಾವತಿಸಿ, ಸ್ವಂತ ಸೌರಶಕ್ತಿ ಪಂಪ್‌ಸೆಟ್ ಅನ್ನು ತಮ್ಮ ಜಮೀನಿನಲ್ಲಿ ಅಳವಡಿಸಿಕೊಳ್ಳಬಹುದು.

ರೈತರಿಗೆ ಆಗುವ ಪ್ರಯೋಜನಗಳು

ಅಕ್ರಮ-ಸಕ್ರಮ ಯೋಜನೆಯಡಿ ಪಂಪ್‌ಸೆಟ್ ಸಕ್ರಮಗೊಳಿಸುವುದರಿಂದ ರೈತರಿಗೆ ಹಲವಾರು ಮಹತ್ವದ ಪ್ರಯೋಜನಗಳು ದೊರೆಯುತ್ತವೆ. ಮೊದಲನೆಯದಾಗಿ, ಇದು ರೈತರಿಗೆ ಕಾನೂನುಬದ್ಧ ರಕ್ಷಣೆ ನೀಡುತ್ತದೆ. ಇದರಿಂದಾಗಿ ದಂಡ ಪಾವತಿಸುವ ಅಥವಾ ವಿದ್ಯುತ್ ಸಂಪರ್ಕ ಕಡಿತಗೊಳ್ಳುವ ಭೀತಿಯಿಲ್ಲದೆ ನಿಶ್ಚಿಂತೆಯಿಂದ ಕೃಷಿ ಚಟುವಟಿಕೆಗಳನ್ನು ಮುಂದುವರಿಸಬಹುದು. ಎರಡನೆಯದಾಗಿ, ಸಂಪರ್ಕವು ಅಧಿಕೃತಗೊಂಡ ನಂತರ ಟ್ರಾನ್ಸ್‌ಫಾರ್ಮರ್ ಸುಟ್ಟು ಹೋದರೆ ಅಥವಾ ವಿದ್ಯುತ್ ಕಂಬ ಹಾಗೂ ತಂತಿಗಳಿಗೆ ಹಾನಿಯಾದರೆ, ಸಂಬಂಧಪಟ್ಟ ಎಸ್ಕಾಂಗಳೇ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಉಚಿತವಾಗಿ ದುರಸ್ತಿ ಮಾಡಿಕೊಡುತ್ತವೆ. ಇವೆಲ್ಲಕ್ಕಿಂತ ಮುಖ್ಯವಾಗಿ, ಸಕ್ರಮಗೊಂಡ ಪಂಪ್‌ಸೆಟ್‌ಗಳಿಗೆ ಅಧಿಕೃತ RR ಸಂಖ್ಯೆ ದೊರೆಯುವುದರಿಂದ, ರೈತರು ಸರ್ಕಾರದ ಉಚಿತ ವಿದ್ಯುತ್ ಅಥವಾ ರಿಯಾಯಿತಿ ದರದ ವಿದ್ಯುತ್ ಯೋಜನೆಗಳಿಗೆ ನೇರವಾಗಿ ಅರ್ಹರಾಗುತ್ತಾರೆ ಮತ್ತು ಸೌರ ಪಂಪ್‌ಸೆಟ್ ಅಳವಡಿಕೆಗೆ ಸಿಗುವ ಬೃಹತ್ ಸಬ್ಸಿಡಿ ಸೌಲಭ್ಯವನ್ನೂ ಪಡೆಯಬಹುದು.

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ, ರೈತರು ತಮ್ಮ ವ್ಯಾಪ್ತಿಗೆ ಬರುವ ಬೆಸ್ಕಾಂ (BESCOM), ಹೆಸ್ಕಾಂ (HESCOM), ಮೆಸ್ಕಾಂ (MESCOM), ಚೆಸ್ಕಾಂ (CESC) ಅಥವಾ ಗೆಸ್ಕಾಂ (GESCOM) ಕಚೇರಿಗೆ ಭೇಟಿ ನೀಡಿ ಸಂಬಂಧಪಟ್ಟ ಅಧಿಕಾರಿಯನ್ನು ಸಂಪರ್ಕಿಸಬೇಕು.
  • ಅರ್ಜಿಯೊಂದಿಗೆ ಜಮೀನಿನ ಮಾಲೀಕತ್ವವನ್ನು ದೃಢೀಕರಿಸುವ ಪಹಣಿ (RTC), ಅರ್ಜಿದಾರರ ಆಧಾರ್ ಕಾರ್ಡ್ ಪ್ರತಿ ಮತ್ತು ಅಕ್ರಮ ಸಂಪರ್ಕದ ಕುರಿತಾದ ಸ್ವಯಂ ಘೋಷಣಾ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.
  • ಸಕ್ರಮೀಕರಣ ಪ್ರಕ್ರಿಯೆಯನ್ನು ಆರಂಭಿಸಲು ಸರ್ಕಾರ ನಿಗದಿಪಡಿಸಿರುವ ಅಂದಾಜು 10,000 ರೂ. ಶುಲ್ಕವನ್ನು ಪಾವತಿಸಬೇಕು (ಈ ಮೊತ್ತವು ಸರ್ಕಾರದ ಕಾಲಕಾಲದ ಆದೇಶದಂತೆ ಬದಲಾಗುವ ಸಾಧ್ಯತೆ ಇರುತ್ತದೆ).
  • ದಾಖಲೆಗಳನ್ನು ಸಲ್ಲಿಸಿದ ನಂತರ, ಎಸ್ಕಾಂ ಅಧಿಕಾರಿಗಳು ರೈತರ ಜಮೀನಿಗೆ ಭೇಟಿ ನೀಡಿ ಪಂಪ್‌ಸೆಟ್‌ನ ಸಾಮರ್ಥ್ಯ ಮತ್ತು ಟ್ರಾನ್ಸ್‌ಫಾರ್ಮರ್‌ನಿಂದ ಇರುವ ಅಂತರವನ್ನು ತಾಂತ್ರಿಕವಾಗಿ ಪರಿಶೀಲಿಸುತ್ತಾರೆ.
  • ತಪಾಸಣೆ ಯಶಸ್ವಿಯಾದ ನಂತರ, ನಿಮ್ಮ ಸಂಪರ್ಕವನ್ನು ಕಾನೂನುಬದ್ಧಗೊಳಿಸಿ ಅಧಿಕೃತವಾದ RR ಸಂಖ್ಯೆಯನ್ನು ನೀಡಲಾಗುತ್ತದೆ. ಇದರಿಂದ ನೀವು ಸರ್ಕಾರದ ಎಲ್ಲಾ ವಿದ್ಯುತ್ ಸೌಲಭ್ಯಗಳನ್ನು ಪಡೆಯಲು ಅರ್ಹರಾಗುತ್ತೀರಿ.

ಸಹಾಯವಾಣಿ ಸಂಖ್ಯೆ

ಹೆಚ್ಚಿನ ಮಾಹಿತಿಗಾಗಿ ಅಥವಾ ದೂರುಗಳಿಗಾಗಿ ಕರ್ನಾಟಕದ ಉಚಿತ ವಿದ್ಯುತ್ ಸಹಾಯವಾಣಿ ಸಂಖ್ಯೆ 1912 ಕ್ಕೆ ಕರೆ ಮಾಡಬಹುದು.

]]>
Tue, 20 Jan 2026 06:57:37 +0530 shivuagrico
Yashsvini yojane 2026&ಯಶಸ್ವಿನಿ ಯೋಜನೆಯಡಿ 5 ಲಕ್ಷದವರೆಗೆ ಉಚಿತ ಚಿಕಿತ್ಸೆ,ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನಿಗಧಿ https://krushirushi.in/Yashsvini-yojane-2026 https://krushirushi.in/Yashsvini-yojane-2026 Yashsvini yojane 2026-ಯಶಸ್ವಿನಿ ಯೋಜನೆಯಡಿ 5 ಲಕ್ಷದವರೆಗೆ ಉಚಿತ ಚಿಕಿತ್ಸೆ,ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನಿಗಧಿ

ಕರ್ನಾಟಕ ಸರ್ಕಾರವು ಸಹಕಾರ ಸಂಘಗಳ ಸದಸ್ಯರಿಗಾಗಿ ಜಾರಿಗೆ ತಂದಿರುವ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯು ಗ್ರಾಮೀಣ ಮತ್ತು ನಗರ ಪ್ರದೇಶದ ಸಹಕಾರಿ ಸದಸ್ಯರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಯೋಜನೆಯಾಗಿದೆ. ಯಶಸ್ವಿನಿ ಯೋಜನೆಯು ಸಹಕಾರಿ ಕುಟುಂಬಗಳಿಗೆ ಆಪತ್ಕಾಲದ ಮಿತ್ರನಿದ್ದಂತೆ. ಈ ಯೋಜನೆಯಡಿ 2025-26ನೇ ಸಾಲಿನ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ಮರುಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ಯಶಸ್ವಿನಿ ಆರೋಗ್ಯ ವಿಮೆ ಯೋಜನೆ? ಪ್ರಯೋಜನಗಳೇನು? ನೋಂದಣಿ ಮಾಡುವುದು ಹೇಗೆ? ಇತ್ಯಾದಿ ಮಾಹಿತಿಗಳು ಇಲ್ಲಿವೆ.

ಏನಿದು ಯಶಸ್ವಿನಿ ಆರೋಗ್ಯ ಯೋಜನೆ?

ಯಶಸ್ವಿನಿ ಆರೋಗ್ಯ ಯೋಜನೆಯು ಕರ್ನಾಟಕ ಸರ್ಕಾರದ ಒಂದು ಮಹತ್ವಾಕಾಂಕ್ಷೆಯ ನಗದು ರಹಿತ ಚಿಕಿತ್ಸಾ ಯೋಜನೆಯಾಗಿದೆ. ಇದು ರಾಜ್ಯದ ಸಹಕಾರ ಸಂಘಗಳ ಸದಸ್ಯರು ಮತ್ತು ಅವರ ಕುಟುಂಬದವರಿಗೆ ಅಲ್ಪ ಮೊತ್ತದ ವಾರ್ಷಿಕ ವಂತಿಗೆಯೊಂದಿಗೆ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ಒದಗಿಸುತ್ತದೆ. ಈ ಯೋಜನೆಯಡಿ ನೋಂದಾಯಿತ ಫಲಾನುಭವಿಗಳು ರಾಜ್ಯಾದ್ಯಂತ ಇರುವ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ವರ್ಷಕ್ಕೆ ಗರಿಷ್ಠ 5 ಲಕ್ಷ ರೂ.ದವರೆಗೆ ಸುಮಾರು 2,128 ಕ್ಕೂ ಹೆಚ್ಚು ವಿವಿಧ ರೀತಿಯ ಶಸ್ತ್ರಚಿಕಿತ್ಸೆ ಮತ್ತು ICU ಚಿಕಿತ್ಸೆಗಳನ್ನು ಪಡೆಯಬಹುದು. ರಾಜ್ಯದ ಎಲ್ಲಾ ಸಹಕಾರಿಗಳ ಮತ್ತು ರೈತರ ನಿರಂತರ ಒತ್ತಾಯ ಹಾಗೂ ಬೇಡಿಕೆ ಪರಿಗಣಿಸಿ ಈ ಹಿಂದೆ 2018ರಲ್ಲಿ ಸ್ಥಗಿತಗೊಳಿಸಿದ್ದ ಯಶಸ್ವಿನಿ ಯೋಜನೆಯನ್ನು ಪುನರ್ ಜಾರಿಗೊಳಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿ, 2022-23ನೇ ಸಾಲಿನ ಆಯವ್ಯಯದಲ್ಲಿ ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ಘೋಷಣೆ ಮಾಡಿದೆ. ಯೋಜನೆ ಜಾರಿಗಾಗಿ “ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್”ಅನ್ನು ರಚಿಸಿದ್ದು, ಇದಕ್ಕೆ ಮಾನ್ಯ ಮುಖ್ಯಮಂತ್ರಿಗಳು ಮಹಾ ಪೋಷಕರಾಗಿ, ಸಹಕಾರ ಸಚಿವರು ಪೋಷಕರಾಗಿ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಸಹಕಾರ ಇಲಾಖೆ ಇವರು ಟ್ರಸ್ಟ್‌ನ ಅಧ್ಯಕ್ಷರಾಗಿರುತ್ತಾರೆ.

ಯೋಜನೆಯ ಪ್ರಮುಖ ಸೌಲಭ್ಯಗಳು

  • ನಗದು ರಹಿತ ಚಿಕಿತ್ಸೆ: ಯಶಸ್ವಿನಿ ಯೋಜನೆಯಡಿ ಫಲಾನುಭವಿಗಳು ಆಸ್ಪತ್ರೆಗೆ ದಾಖಲಾದಾಗ ಯಾವುದೇ ಹಣ ಪಾವತಿಸುವ ಅಗತ್ಯವಿರುವುದಿಲ್ಲ; ಕೇವಲ ಯಶಸ್ವಿನಿ ಕಾರ್ಡ್ ತೋರಿಸುವ ಮೂಲಕ ನೇರವಾಗಿ ನಗದು ರಹಿತ ಚಿಕಿತ್ಸೆ ಪಡೆಯಬಹುದು.
  • ವಾರ್ಷಿಕ ಚಿಕಿತ್ಸಾ ಮಿತಿ: ಈ ಯೋಜನೆಯಡಿ ನೋಂದಾಯಿತ ಒಂದು ಕುಟುಂಬಕ್ಕೆ ಒಂದು ವರ್ಷಕ್ಕೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಆಗುವ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ.
  • ಚಿಕಿತ್ಸೆಗಳ ಲಭ್ಯತೆ: ಯೋಜನೆಯಲ್ಲಿ ಸುಮಾರು 1,650 ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗಳು ಮತ್ತು ಐಸಿಯು (ICU) ಸೇರಿದಂತೆ ಒಟ್ಟು 2,128 ವಿವಿಧ ರೀತಿಯ ವೈದ್ಯಕೀಯ ಚಿಕಿತ್ಸೆಗಳು ಲಭ್ಯವಿವೆ.
  • ಆಸ್ಪತ್ರೆಗಳ ಜಾಲ: ಈ ಸೌಲಭ್ಯವು ರಾಜ್ಯಾದ್ಯಂತ ಇರುವ ನೂರಾರು ನೋಂದಾಯಿತ ಸರ್ಕಾರಿ ಮತ್ತು ಖಾಸಗಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಮಾತ್ರ ದೊರೆಯಲಿದ್ದು, ಸದಸ್ಯರು ಚಿಕಿತ್ಸೆಗೂ ಮುನ್ನ ಆಸ್ಪತ್ರೆಯು ಈ ಯೋಜನೆಗೆ ಒಳಪಟ್ಟಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು.

ಸದಸ್ಯತ್ವ ಪಡೆಯಲು ಅರ್ಹತೆಗಳು

  • ಕರ್ನಾಟಕ ರಾಜ್ಯದ ಯಾವುದೇ ನೋಂದಾಯಿತ ಸಹಕಾರ ಸಂಘದಲ್ಲಿ ಕನಿಷ್ಠ 3 ತಿಂಗಳಿಂದ ಸದಸ್ಯರಾಗಿರುವವರು ಈ ಯೋಜನೆಗೆ ಅರ್ಹರು; ಆದರೆ ಹೊಸದಾಗಿ ಅಸ್ತಿತ್ವಕ್ಕೆ ಬಂದ ಸಂಘಗಳ ಸದಸ್ಯರಿಗೆ ಕೇವಲ 1 ತಿಂಗಳ ಸದಸ್ಯತ್ವವಿದ್ದರೂ ಅರ್ಜಿ ಸಲ್ಲಿಸಲು ಅವಕಾಶವಿದೆ.
  • ಸಹಕಾರ ಸಂಘಗಳಲ್ಲಿ ಕನಿಷ್ಠ 3 ವರ್ಷಗಳ ಕಾಲ ನಿರಂತರ ಸೇವೆ ಸಲ್ಲಿಸಿರುವ ಮತ್ತು ಮಾಸಿಕ 30,000 ರೂಪಾಯಿಗಳಿಗಿಂತ ಕಡಿಮೆ ಒಟ್ಟು ವೇತನ ಪಡೆಯುತ್ತಿರುವ ನೌಕರರು ಈ ಯೋಜನೆಯ ಲಾಭ ಪಡೆಯಬಹುದು.
  • ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿದಾರರಿಗೆ ಗರಿಷ್ಠ 75 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
  • ಈ ಯೋಜನೆಯ ಪ್ರಯೋಜನವು ಕೇವಲ ಮೂಲ ಸದಸ್ಯರಿಗೆ ಮಾತ್ರವಲ್ಲದೆ ಅವರ ಕುಟುಂಬದ ಸದಸ್ಯರಾದ ಪತಿ ಅಥವಾ ಪತ್ನಿ, ಮಕ್ಕಳು ಮತ್ತು ಆಶ್ರಿತ ಪೋಷಕರಿಗೂ ದೊರೆಯುತ್ತದೆ.

ಯಾರು ಅರ್ಹರಲ್ಲ?

ಸರ್ಕಾರಿ ನೌಕರರು, ಖಾಸಗಿ ಕಂಪನಿಯಲ್ಲಿ 30,000 ರೂ.ಕ್ಕಿಂತ ಹೆಚ್ಚು ವೇತನ ಪಡೆಯುವವರು ಮತ್ತು ಈಗಾಗಲೇ ಬೇರೆ ಆರೋಗ್ಯ ವಿಮೆ ಹೊಂದಿರುವವರು ಈ ಯೋಜನೆಗೆ ಅರ್ಹರಲ್ಲ.

ವಂತಿಗೆ ಮೊತ್ತ ಎಷ್ಟು?

  • ಗ್ರಾಮೀಣ ಭಾಗದ ಸಹಕಾರ ಸಂಘಗಳ ಸದಸ್ಯರ ಗರಿಷ್ಠ ನಾಲ್ಕು ಜನರ ಕುಟುಂಬಕ್ಕೆ ವರ್ಷಕ್ಕೆ 500 ರೂ. ವಂತಿಗೆ ನಿಗದಿಪಡಿಸಲಾಗಿದೆ. ಒಂದು ವೇಳೆ ಕುಟುಂಬದಲ್ಲಿ ನಾಲ್ಕಕ್ಕಿಂತ ಹೆಚ್ಚು ಸದಸ್ಯರಿದ್ದರೆ, ಪ್ರತಿ ಹೆಚ್ಚುವರಿ ಸದಸ್ಯರಿಗೆ ತಲಾ 100 ರೂ. ಪಾವತಿಸಬೇಕಾಗುತ್ತದೆ.
  • ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರ ಗರಿಷ್ಠ ನಾಲ್ಕು ಜನರ ಕುಟುಂಬಕ್ಕೆ ವಾರ್ಷಿಕ 1,000 ರೂ. ವಂತಿಗೆ ಇರುತ್ತದೆ. ಈ ಕುಟುಂಬಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಸದಸ್ಯರಿದ್ದಲ್ಲಿ, ಪ್ರತಿ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ.ರಂತೆ ಹೆಚ್ಚಿನ ಹಣ ಪಾವತಿಸಬೇಕು.
  • SC ಮತ್ತು ST ಸಮುದಾಯದ ಸಹಕಾರಿ ಸದಸ್ಯರಿಗೆ ಈ ಯೋಜನೆಯು ಸಂಪೂರ್ಣ ಉಚಿತವಾಗಿದ್ದು, ಅವರ ವಂತಿಗೆ ಮೊತ್ತವನ್ನು ಸರ್ಕಾರವೇ ಭರಿಸುತ್ತದೆ.
  • ಪರಿಶಿಷ್ಟ ಜಾತಿ ಅಥವಾ ಪಂಗಡದ ಸದಸ್ಯರು ಈ ಸೌಲಭ್ಯ ಪಡೆಯಲು ತಮ್ಮ ಜಾತಿ ಪ್ರಮಾಣ ಪತ್ರದಲ್ಲಿರುವ ಆರ್.ಡಿ (R.D) ಸಂಖ್ಯೆಯನ್ನು ಅರ್ಜಿಯೊಂದಿಗೆ ಕಡ್ಡಾಯವಾಗಿ ನಮೂದಿಸಬೇಕು.

ನಿಯಮಗಳು ಮತ್ತು ನಿಬಂಧನೆಗಳು

  • ಯೋಜನೆಯ ನಿಯಮದಂತೆ ಫಲಾನುಭವಿಗಳು ಆಸ್ಪತ್ರೆಯ ಜನರಲ್ ವಾರ್ಡ್‌ನಲ್ಲಿ ಮಾತ್ರ ಚಿಕಿತ್ಸೆ ಪಡೆಯಲು ಅರ್ಹರಾಗಿರುತ್ತಾರೆ. ಒಂದು ವೇಳೆ ಸದಸ್ಯರು ತಮ್ಮ ಇಚ್ಛೆಯಂತೆ ಸ್ಪೆಷಲ್ ವಾರ್ಡ್ ಅಥವಾ ಸೆಮಿ-ಸ್ಪೆಷಲ್ ವಾರ್ಡ್ ಬಯಸಿದಲ್ಲಿ, ಅದರ ಹೆಚ್ಚುವರಿ ವೆಚ್ಚವನ್ನು ಅವರೇ ಪಾವತಿಸಬೇಕಾಗುತ್ತದೆ.
  • ಮೊಣಕಾಲು ಚಿಪ್ಪು ಬದಲಾವಣೆ ಅಥವಾ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯ ಲೆನ್ಸ್‌ಗಳಂತಹ ಇಂಪ್ಲಾಂಟ್ಸ್‌ಗಳ ಮೂಲ ದರವು ಯೋಜನೆಯ ಪ್ಯಾಕೇಜ್‌ನಲ್ಲಿ ಸೇರಿರುತ್ತದೆ. ಆದರೆ ಸದಸ್ಯರು ಉನ್ನತ ದರ್ಜೆಯ ಅಥವಾ ಹೆಚ್ಚಿನ ಬೆಲೆಯ ಇಂಪ್ಲಾಂಟ್ಸ್‌ಗಳನ್ನು ಬಳಸಲು ಬಯಸಿದರೆ, ಪ್ಯಾಕೇಜ್ ದರಕ್ಕಿಂತ ಹೆಚ್ಚಿನದಾದ ವ್ಯತ್ಯಾಸದ ಮೊತ್ತವನ್ನು ಸ್ವತಃ ಭರಿಸಬೇಕು.
  • ಈ ಯೋಜನೆಯಡಿ ಹೆರಿಗೆ ಸೌಲಭ್ಯವು ಕೇವಲ ಎರಡು ಜೀವಂತ ಮಕ್ಕಳಿಗೆ ಅಥವಾ ಗರಿಷ್ಠ ಎರಡು ಹೆರಿಗೆಗಳಿಗೆ ಮಾತ್ರ ಸೀಮಿತವಾಗಿರುತ್ತದೆ.
  • ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಹೊರ ರೋಗಿಯಾಗಿ ಚಿಕಿತ್ಸೆ ಪಡೆಯುವಾಗ (ಮೂರು ತಿಂಗಳ ಅವಧಿಗೆ) ಗರಿಷ್ಠ 200 ರೂ. ಶುಲ್ಕ ನಿಗದಿಪಡಿಸಲಾಗಿದ್ದು, ಈ ಪೈಕಿ 100 ರೂ. ಗಳನ್ನು ಯಶಸ್ವಿನಿ ಟ್ರಸ್ಟ್ ಭರಿಸುತ್ತದೆ.

    ಯಾವೆಲ್ಲಾ ಚಿಕಿತ್ಸೆಗಳು ಲಭ್ಯ?

    • ಹೃದಯ ಮತ್ತು ಸಾಮಾನ್ಯ ರೋಗಗಳು: ಹೃದಯ ಸಂಬಂಧಿ ಕಾಯಿಲೆಗಳು, ಸಾಮಾನ್ಯ ಶಾರೀರಿಕ ಕಾಯಿಲೆಗಳು ಮತ್ತು ಅವುಗಳಿಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗಳು.
    • ಮೂಳೆ ಮತ್ತು ನರ ರೋಗಗಳು: ಮೂಳೆ ರೋಗಗಳು, ನರವೈಜ್ಞಾನಿಕ ಶಸ್ತ್ರಚಿಕಿತ್ಸೆ ಮತ್ತು ನರ ಸಂಬಂಧಿತ ಕಾಯಿಲೆಗಳು.
    • ಕ್ಯಾನ್ಸರ್ ಮತ್ತು ನಾಳೀಯ ಚಿಕಿತ್ಸೆ: ಶಸ್ತ್ರಚಿಕಿತ್ಸಾ ಆಂಕೊಲಾಜಿ ಮತ್ತು ನಾಳೀಯ ಶಸ್ತ್ರಚಿಕಿತ್ಸೆ .
    • ವಿಶೇಷ ವಿಭಾಗಗಳು: ಕಿವಿ, ಮೂಗು ಮತ್ತು ಗಂಟಲು ರೋಗಗಳು ಹಾಗೂ ಕಣ್ಣಿನ ಕಾಯಿಲೆಗಳ ಚಿಕಿತ್ಸೆ.
    • ಮಹಿಳೆ ಮತ್ತು ಮಕ್ಕಳ ಚಿಕಿತ್ಸೆ: ಪ್ರಸೂತಿ ಮತ್ತು ಸ್ತ್ರೀರೋಗಗಳು, ಯುರೋಲಜಿ, ಹಾಗೂ ನವಜಾತ ಶಿಶು ಮತ್ತು ಮಕ್ಕಳ ಚಿಕಿತ್ಸೆ.
    • ತುರ್ತು ಮತ್ತು ಅಪಘಾತ ಪ್ರಕರಣಗಳು: ನಾಯಿ ಕಡಿತ ಮತ್ತು ಹಾವು ಕಡಿತಕ್ಕೆ ಚಿಕಿತ್ಸೆ. ಕೃಷಿ ಉಪಕರಣಗಳನ್ನು ಬಳಸುವಾಗ ಸಂಭವಿಸುವ ಅಪಘಾತಗಳು. ಕೆಲವು ನಿರ್ದಿಷ್ಟ ರೀತಿಯ ಸುಟ್ಟಗಾಯಗಳು. ಇತರ ಸಾಮಾನ್ಯ ತುರ್ತು ವೈದ್ಯಕೀಯ ಪರಿಸ್ಥಿತಿಗಳು ಇತ್ಯಾದಿ.

    ನೋಂದಣಿಗೆ ಕೊನೆಯ ದಿನಾಂಕ ಎಂದು?

    ಈ ಯೋಜನೆಯಡಿ 2026ರ ಜನವರಿ 03ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 31, 2026 ಕೊನೆಯ ದಿನಾಂಕವಾಗಿದೆ. ನೋಂದಾಯಿತ ಸದಸ್ಯರಿಗೆ ಮಾರ್ಚ್ 01, 2026ರಿಂದ ಯಶಸ್ವಿನಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಲಾಗುವುದು ಮತ್ತು ಈ ಕಾರ್ಡ್ ಬಳಸಿ ಚಿಕಿತ್ಸೆ ಪಡೆಯುವ ಅವಧಿಯು ಏಪ್ರಿಲ್ 01, 2026 ರಿಂದ ಮಾರ್ಚ್ 31, 2027 ರವರೆಗೆ ಇರುತ್ತದೆ. ಆದ್ದರಿಂದ ಅರ್ಹ ಸದಸ್ಯರು ತಡಮಾಡದೆ ತಮ್ಮ ಹತ್ತಿರದ ಸಹಕಾರ ಸಂಘಗಳಲ್ಲಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ.

ಯೋಜನೆಗೆ ನೋಂದಣಿ ಮಾಡುವುದು ಹೇಗೆ?

  • ನೀವು ಸದಸ್ಯರಾಗಿರುವ ಅಥವಾ ಷೇರು ಹೊಂದಿರುವ ನಿಮ್ಮ ಹತ್ತಿರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸಹಕಾರಿ ಬ್ಯಾಂಕ್ ಅಥವಾ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಭೇಟಿ ನೀಡಿ.
  • ಸಂಘದ ಕಚೇರಿಯಲ್ಲಿ ಲಭ್ಯವಿರುವ 'ಯಶಸ್ವಿನಿ ನೋಂದಣಿ ಅರ್ಜಿ'ಯನ್ನು ಪಡೆದು, ಕುಟುಂಬದ ಎಲ್ಲಾ ಸದಸ್ಯರ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.
  • ಅರ್ಜಿಯೊಂದಿಗೆ ಕುಟುಂಬದ ಪ್ರತಿಯೊಬ್ಬ ಸದಸ್ಯರ ಆಧಾರ್ ಕಾರ್ಡ್ ಪ್ರತಿ, ರೇಷನ್ ಕಾರ್ಡ್ ಪ್ರತಿ ಮತ್ತು ತಲಾ 2 ಇತ್ತೀಚಿನ ಭಾವಚಿತ್ರಗಳನ್ನು (Photos) ನೀಡಿ.
  • ತಮ್ಮ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ (ಗ್ರಾಮೀಣ ಭಾಗದವರಿಗೆ 500 ರೂ., ನಗರ ಭಾಗದವರಿಗೆ 1,000 ರೂ. ನಿಗದಿತ ವಂತಿಗೆ ಮೊತ್ತವನ್ನು ಸಂಘದ ಕಚೇರಿಯಲ್ಲಿ ಪಾವತಿಸಿ ರಸೀದಿ ಪಡೆಯಿರಿ.
  • ಅರ್ಜಿಯನ್ನು ಸಲ್ಲಿಸಿದ ನಂತರ ನಿಮ್ಮ ಮೊಬೈಲ್ ಸಂಖ್ಯೆಗೆ ನೋಂದಣಿಯ ಬಗ್ಗೆ ಸಂದೇಶ ಬರಲಿದೆ. ಮಾರ್ಚ್ 1ರ ನಂತರ ನಿಮ್ಮ ಸಹಕಾರ ಸಂಘದ ಮೂಲಕವೇ ಪ್ಲಾಸ್ಟಿಕ್ ಯಶಸ್ವಿನಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬಹುದು. ಕಾರ್ಡ್ ಕಳೆದುಕೊಂಡರೆ 250 ರೂ. ಪಾವತಿಸಿ ಡೂಪ್ಲಿಕೇಟ್ ಕಾರ್ಡ್ ಪಡೆಯಬಹುದು.



ಅಗತ್ಯ ವಿರುವ ದಾಖಲೆಗಳು

  • ಆಧಾರ್ ಕಾರ್ಡ್
  • ಪಡಿತರ ಚೀಟಿ
  • ಸಹಕಾರ ಸಂಘದ ಸದಸ್ಯತ್ವ ಪುರಾವೆ
  • ಕುಟುಂಬದ ಪ್ರತಿಯೊಬ್ಬ ಸದಸ್ಯರ 2 ಭಾವಚಿತ್ರಗಳು
  • ಸದಸ್ಯರ ಮೊಬೈಲ್ ಸಂಖ್ಯೆ

]]>
Tue, 20 Jan 2026 06:22:21 +0530 shivuagrico
Baddi sahayadana&ಕೇವಲ 4% ಬಡ್ಡಿ ದರದಲ್ಲಿ 5 ಕೋಟಿವರೆಗೆ ಸಾಲಸೌಲಭ್ಯ https://krushirushi.in/Baddi-sahayadana-2397 https://krushirushi.in/Baddi-sahayadana-2397 Baddi sahayadana-ಕೇವಲ 4% ಬಡ್ಡಿ ದರದಲ್ಲಿ 5 ಕೋಟಿವರೆಗೆ ಸಾಲಸೌಲಭ್ಯ

ಮಹಿಳಾ ಉದ್ಯಮಿಗಳಿಗೆ ಕರ್ನಾಟಕ ಸರ್ಕಾರದಿಂದ ಸಿಹಿ ಸುದ್ದಿ. ಕೇವಲ ಶೇ. 4ರಷ್ಟು ಬಡ್ಡಿದರದಲ್ಲಿ ಸಾಲ ಪಡೆಯುವ ಅವಕಾಶ. ಹೊಸ ಉದ್ಯಮ ಸ್ಥಾಪನೆಗೆ ಅಥವಾ ವಿಸ್ತರಣೆಗೆ ರೂ. 5 ಲಕ್ಷದಿಂದ ರೂ. 5 ಕೋಟಿವರೆಗೆ ಸಾಲ ಲಭ್ಯ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಬಡ್ಡಿ ವ್ಯತ್ಯಾಸವನ್ನು ಭರಿಸುತ್ತದೆ. ಅರ್ಹತೆ ಮತ್ತು ಅರ್ಜಿ ಸಲ್ಲಿಕೆ ವಿವರಗಳು ಲಭ್ಯ. ಈ ಕುರಿತ ವಿವರಗಳು ಇಲ್ಲಿವೆ.

ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲು ಸರ್ಕಾರದ ಹಲವು ಯೋಜನೆಗಳನ್ನು ರೂಪಿಸಿದೆ. ಉದ್ಯಮಿಗಳಿಗೆ ಕಡಿಮೆ ಬಡ್ಡಿಯಲ್ಲಿ ಸಾಲವನ್ನು ನೀಡುತ್ತಿದೆ. ಕರ್ನಾಟಕ ಸರ್ಕಾರವು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು ಅತ್ಯಂತ ಆಕರ್ಷಕವಾದ ಸಾಲ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಮಹಿಳಾ ಉದ್ಯಮಿಗಳು ಕೇವಲ ಶೇ. 4ರಷ್ಟು ನಿವ್ವಳ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಪಡೆಯಬಹುದು.

ಯೋಜನೆಯ ಪ್ರಮುಖ ಅಂಶಗಳು

  • ಸಾಲದ ಮೊತ್ತ: ಕನಿಷ್ಠ ರೂ. 5.00 ಲಕ್ಷದಿಂದ ಗರಿಷ್ಠ ರೂ. 5.00 ಕೋಟಿ (500 ಲಕ್ಷ) ವರೆಗೆ.
  • ನಿವ್ವಳ ಬಡ್ಡಿದರ: ಮಹಿಳಾ ಉದ್ಯಮಿಗಳು ಪಾವತಿಸಬೇಕಾದ ಅಂತಿಮ ಬಡ್ಡಿ ದರ ವಾರ್ಷಿಕ ಶೇ. 4 ಮಾತ್ರ.
  • ಬಡ್ಡಿ ಸಹಾಯಧನ: ಸಂಸ್ಥೆಯು ವಿಧಿಸುವ ಸಾಮಾನ್ಯ ಬಡ್ಡಿದರ ಮತ್ತು ಶೇ. 4ರ ನಡುವಿನ ವ್ಯತ್ಯಾಸದ ಮೊತ್ತವನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಸಹಾಯಧನದ ರೂಪದಲ್ಲಿ ಸಂಸ್ಥೆಗೆ ಭರಿಸುತ್ತದೆ.
  • ಅವಧಿ: ಈ ಸಹಾಯಧನವು ಸಾಲ ವಿತರಣೆಯಾದ ದಿನಾಂಕದಿಂದ ಗರಿಷ್ಠ 5 ವರ್ಷಗಳವರೆಗೆ ಮಾತ್ರ ಲಭ್ಯವಿರುತ್ತದೆ.

ಅರ್ಹತೆಗಳು ಮತ್ತು ಷರತ್ತುಗಳು

  • ಉದ್ಯಮದ ಮಾಲೀಕತ್ವ: ಏಕಸ್ವಾಮ್ಯದ ಘಟಕ, ಪಾಲುದಾರಿಕೆ ಸಂಸ್ಥೆ ಅಥವಾ ಖಾಸಗಿ ಕಂಪನಿಯಾಗಿದ್ದಲ್ಲಿ, ಮಹಿಳಾ ಪಾಲುದಾರರು/ನಿರ್ದೇಶಕರು ಕನಿಷ್ಠ ಶೇ. 51 ರಷ್ಟು ಷೇರುಗಳನ್ನು ಹೊಂದಿರಬೇಕು.
  • ಯೋಜನೆಯ ವ್ಯಾಪ್ತಿ: ಹೊಸ ಘಟಕಗಳ ಸ್ಥಾಪನೆ, ಅಸ್ತಿತ್ವದಲ್ಲಿರುವ ಘಟಕಗಳ ವಿಸ್ತರಣೆ, ಆಧುನೀಕರಣ ಅಥವಾ ತಾಂತ್ರಿಕ ಉನ್ನತೀಕರಣಕ್ಕಾಗಿ ಮಾಡುವ ಹೊಸ ಹೂಡಿಕೆಗೆ (ಕಟ್ಟಡ ಮತ್ತು ಉಪಕರಣಗಳು) ಈ ಸಾಲ ಅನ್ವಯಿಸುತ್ತದೆ.
  • ಮರುಪಾವತಿ ನಿಯಮ: ಬಡ್ಡಿ ಸಹಾಯಧನದ ಪ್ರಯೋಜನ ಪಡೆಯಲು ಸಾಲಗಾರರು ಕಂತುಗಳ ಮರುಪಾವತಿಯಲ್ಲಿ ಸುಸ್ತಿದಾರರಾಗಬಾರದು. ಸರಿಯಾದ ಸಮಯಕ್ಕೆ ಮರುಪಾವತಿ ಮಾಡಿದರೆ ಮಾತ್ರ ಸಹಾಯಧನ ದೊರೆಯುತ್ತದೆ.
  • ದಿನಾಂಕ: ಈ ಯೋಜನೆಯು ಮೇ 12, 2017ರ ನಂತರ ಮಂಜೂರಾದ ಸಾಲಗಳಿಗೆ ಅನ್ವಯಿಸುತ್ತದೆ.

ಅರ್ಹ ಚಟುವಟಿಕೆಗಳು

  • ಆರೋಗ್ಯ ಸೇವೆಗಳು: ಆಸ್ಪತ್ರೆಗಳು, ನರ್ಸಿಂಗ್ ಹೋಮ್, ಕಣ್ಣಿನ ಆಸ್ಪತ್ರೆ, ದಂತ ಚಿಕಿತ್ಸಾಲಯಗಳು, ಡಯಾಗ್ನಾಸ್ಟಿಕ್ ಕೇಂದ್ರಗಳು (ಎಕ್ಸರೇ, ಸ್ಕ್ಯಾನಿಂಗ್, ಲ್ಯಾಬ್).
  • ಪ್ರವಾಸೋದ್ಯಮ: ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಕೇಟರಿಂಗ್ ಸೇವೆಗಳು.
  • ತಂತ್ರಜ್ಞಾನ: ಮಾಹಿತಿ ತಂತ್ರಜ್ಞಾನ ಸೇವಾ ಕೇಂದ್ರಗಳು.
  • ಇತರೆ: ಜಿಮ್, ಸ್ಪಾ, ಆರೋಗ್ಯ ಕೇಂದ್ರಗಳು, ಇವೆಂಟ್ ಮ್ಯಾನೇಜ್‌ಮೆಂಟ್, ಅಮ್ಯೂಸ್‌ಮೆಂಟ್ ಪಾರ್ಕ್‌ಗಳು ಮತ್ತು ಕೈಗಾರಿಕಾ ವಲಯದ ವೇ-ಬ್ರಿಡ್ಜ್‌ಗಳು.

ಯಾವ ಚಟುವಟಿಕೆಗಳಿಗೆ ಸಾಲ ಸಿಗುವುದಿಲ್ಲ?

  • ರಿಯಲ್ ಎಸ್ಟೇಟ್ ಚಟುವಟಿಕೆಗಳು, ವಾಣಿಜ್ಯ ಮಾಲ್‌ಗಳು ಮತ್ತು ವಸತಿ ಸಮುಚ್ಚಯಗಳ ನಿರ್ಮಾಣ.
  • ಚಿತ್ರಮಂದಿರಗಳು ಮತ್ತು ಸಾರಿಗೆ ಸಂಬಂಧಿತ ಚಟುವಟಿಕೆಗಳು.
  • ಬೇರೆ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲದ ವರ್ಗಾವಣೆ.
  • ಸರ್ಕಾರಿ ಸ್ವಾಮ್ಯದ ಭೂಮಿ ಖರೀದಿಸಲು ಈ ಯೋಜನೆ ಅನ್ವಯಿಸುವುದಿಲ್ಲ.
  • ಈಗಾಗಲೇ ಬೇರೆ ಸರ್ಕಾರಿ ಯೋಜನೆಗಳಡಿ ಬಡ್ಡಿ ಸಹಾಯಧನ ಪಡೆಯುತ್ತಿರುವ ಘಟಕಗಳು.

ಬಡ್ಡಿದರ ಮತ್ತು ಸಹಾಯಧನ ಪಡೆಯುವುದು ಹೇಗೆ?

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಈ ಯೋಜನೆಯಡಿ ಮಹಿಳಾ ಉದ್ಯಮಿಗಳಿಗೆ ವಾರ್ಷಿಕ ಶೇ. 4ರಷ್ಟು ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ದೊರೆಯಲಿದ್ದು, ಸಂಸ್ಥೆಯು ಸಾಲವನ್ನು ಮೊದಲು ಶೇ. 12.00 ರಿಂದ ಶೇ. 14.50 ರವರೆಗಿನ ಸಾಮಾನ್ಯ ಬಡ್ಡಿದರದಲ್ಲಿ ಮಂಜೂರು ಮಾಡುತ್ತದೆ. ಸಾಲಗಾರರು ಆರಂಭದಲ್ಲಿ ಈ ಸಾಮಾನ್ಯ ದರದಂತೆ ಕಂತುಗಳನ್ನು ಪಾವತಿಸಬೇಕಾಗುತ್ತದೆ; ಆದರೆ ಉದ್ಯಮಿಯು ಮರುಪಾವತಿಯಲ್ಲಿ ಯಾವುದೇ ವಿಳಂಬ ಮಾಡದೆ ನಿಯಮಿತವಾಗಿ ಕಂತುಗಳನ್ನು ಪಾವತಿಸಿದರೆ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ವಿಧಿಸಿದ ಸಾಮಾನ್ಯ ಬಡ್ಡಿದರ ಮತ್ತು ಶೇ. 4ರ ನಡುವಿನ ಉಳಿದ ಮೊತ್ತವನ್ನು (ವ್ಯತ್ಯಾಸವನ್ನು) ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಪ್ರತಿ ತಿಂಗಳು ಸಹಾಯಧನದ ರೂಪದಲ್ಲಿ ಮರುಪಾವತಿಸುತ್ತದೆ. ಈ ಮೂಲಕ ಮಹಿಳಾ ಉದ್ಯಮಿಗಳ ಮೇಲಿನ ಬಡ್ಡಿಯ ಹೊರೆಯನ್ನು ಗಣನೀಯವಾಗಿ ಕಡಿಮೆ ಮಾಡಲಾಗುತ್ತದೆ. ಸಾಲದ ಮೊತ್ತದ ಶೇ. 0.50 ರಿಂದ ಶೇ. 1.00 ರವರೆಗೆ ಸಂಸ್ಕರಣಾ ಶುಲ್ಕ ಇರುತ್ತದೆ.

ಉದ್ಯಮಿಯ ಬಂಡವಾಳದ ಪಾಲು ಎಷ್ಟು?

ಈ ಯೋಜನೆಯಡಿ ಸಾಲ ಪಡೆಯಲು ಮಹಿಳಾ ಉದ್ಯಮಿಗಳು ತಮ್ಮ ಕಡೆಯಿಂದ ಹೂಡಿಕೆ ಮಾಡಬೇಕಾದ ಬಂಡವಾಳದ ಪಾಲು (ಮಾರ್ಜಿನ್ ಮನಿ) ಅವರು ಉದ್ಯಮವನ್ನು ಸ್ಥಾಪಿಸುವ ಪ್ರದೇಶದ ಮೇಲೆ ಅವಲಂಬಿತವಾಗಿರುತ್ತದೆ. ಅಂದರೆ, ಕೈಗಾರಿಕಾ ದೃಷ್ಟಿಯಿಂದ ಹಿಂದುಳಿದ ಜಿಲ್ಲೆ ಅಥವಾ ಪ್ರದೇಶಗಳಲ್ಲಿ ಉದ್ಯಮ ಪ್ರಾರಂಭಿಸುವವರಿಗೆ ಒಟ್ಟು ಯೋಜನಾ ವೆಚ್ಚದ ಶೇ. 20.00 ರಷ್ಟು ಬಂಡವಾಳ ಹೂಡಿಕೆ ಸಾಕಾಗುತ್ತದೆ. ಆದರೆ ಹಿಂದುಳಿದಿರದ ಇತರ ಸುಧಾರಿತ ಜಿಲ್ಲೆ ಅಥವಾ ಪ್ರದೇಶಗಳಲ್ಲಿ ಉದ್ಯಮ ಸ್ಥಾಪಿಸುವವರು ಯೋಜನಾ ವೆಚ್ಚದ ಶೇ. 22.50 ರಷ್ಟು ಪಾಲನ್ನು ತಮ್ಮ ಸ್ವಂತ ಬಂಡವಾಳವಾಗಿ ಹೊಂದಿರಬೇಕಾಗುತ್ತದೆ.

 

ಸಾಲ ಮರುಪಾವತಿ ಹಾಗೂ ಸಹಾಯಧನದ ಅವಧಿ ಎಷ್ಟು?

ಈ ಯೋಜನೆಯಡಿ ಬಡ್ಡಿ ಸಹಾಯಧನದ ಸೌಲಭ್ಯವು ಸಾಲದ ಮೊದಲ ಕಂತು ಬಿಡುಗಡೆಯಾದ ದಿನಾಂಕದಿಂದ ಗರಿಷ್ಠ 5 ವರ್ಷಗಳ ಅವಧಿಗೆ ಮಾತ್ರ ಸೀಮಿತವಾಗಿರುತ್ತದೆ. ಒಂದು ವೇಳೆ ಸಾಲದ ಒಟ್ಟು ಮರುಪಾವತಿ ಅವಧಿಯು 5 ವರ್ಷಗಳಿಗಿಂತ ಹೆಚ್ಚಿದ್ದರೂ ಸಹ, ಉದ್ಯಮಿಗಳು ಸಹಾಯಧನವನ್ನು ಕೇವಲ ಮೊದಲ 5 ವರ್ಷಗಳವರೆಗೆ ಮಾತ್ರ ಪಡೆಯಲು ಅರ್ಹರಾಗಿರುತ್ತಾರೆ. ಇನ್ನು ಸಾಲದ ಒಟ್ಟು ಮರುಪಾವತಿ ಅವಧಿ, ಮಾಸಿಕ ಕಂತುಗಳ ವಿವರ ಹಾಗೂ ಅವಧಿಪೂರ್ವ ಸಾಲ ಮನ್ನಾ ಮಾಡಲು ಇರುವ ಶುಲ್ಕಗಳ ಕುರಿತಾದ ನಿಖರ ಮಾಹಿತಿಗಾಗಿ ಅರ್ಜಿದಾರರು ತಮ್ಮ ಹತ್ತಿರದ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಶಾಖೆಯನ್ನು ನೇರವಾಗಿ ಸಂಪರ್ಕಿಸಿ ಮಾಹಿತಿ ಪಡೆಯುವುದು ಅತ್ಯಗತ್ಯವಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ನಿಮ್ಮ ಉದ್ಯಮದ ವಿವರವಾದ ಯೋಜನಾ ವರದಿ ಸಿದ್ಧಪಡಿಸಿಕೊಳ್ಳಿ.
  • ಅಗತ್ಯ ದಾಖಲೆಗಳೊಂದಿಗೆ ನಿಮ್ಮ ಜಿಲ್ಲೆಯ ಹತ್ತಿರದ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಶಾಖೆಗೆ ಭೇಟಿ ನೀಡಿ.
  • ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಥವಾ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿಯನ್ನು ಸಂಪರ್ಕಿಸಬಹುದು.



ಅಗತ್ಯವಿರುವ ದಾಖಲೆಗಳು

  • ಯೋಜನಾ ವರದಿ: ಉದ್ಯಮದ ವಿವರ, ಹೂಡಿಕೆ, ಲಾಭ-ನಷ್ಟದ ಅಂದಾಜು ಮತ್ತು ಉದ್ಯೋಗಾವಕಾಶಗಳ ಬಗ್ಗೆ ಸಂಪೂರ್ಣ ಮಾಹಿತಿ ಇರುವ ವರದಿ.
  • ಗುರುತಿನ ಚೀಟಿ: ಆಧಾರ್ ಕಾರ್ಡ್, ವೋಟರ್ ಐಡಿ ಅಥವಾ ಪಾಸ್‌ಪೋರ್ಟ್.
  • ವಿಳಾಸದ ಪುರಾವೆ: ರೇಷನ್ ಕಾರ್ಡ್ ಅಥವಾ ಇತ್ತೀಚಿನ ವಿದ್ಯುತ್ ಬಿಲ್.
  • ಪಾನ್ ಕಾರ್ಡ್: ಉದ್ಯಮಿ ಮತ್ತು ಉದ್ಯಮದ ಹೆಸರಿನಲ್ಲಿರುವುದು ಕಡ್ಡಾಯ.
  • ಭಾವಚಿತ್ರ: ಅರ್ಜಿದಾರರ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಫೋಟೋಗಳು.
  • ಉದ್ಯಮ ನೋಂದಣಿ ಪ್ರಮಾಣಪತ್ರ/ ಜಿಎಸ್ ಟಿ ನೋಂದಣಿ ಪ್ರಮಾಣಪತ್ರ.
  • ಕಟ್ಟಡದ ದಾಖಲೆ: ಉದ್ಯಮ ನಡೆಸುವ ಜಾಗದ ಬಾಡಿಗೆ ಒಪ್ಪಂದ ಅಥವಾ ಸ್ವಂತ ಜಾಗವಾಗಿದ್ದರೆ ಖಾತಾ/ತೆರಿಗೆ ಪಾವತಿ ರಶೀದಿ.
  • ಪರವಾನಗಿ: ಸ್ಥಳೀಯ ಸಂಸ್ಥೆಗಳಿಂದ (ಗ್ರಾಮ ಪಂಚಾಯತ್/ನಗರ ಸಭೆ) ಪಡೆದ ವ್ಯಾಪಾರ ಪರವಾನಗಿ ಅಥವಾ ಕೈಗಾರಿಕಾ ಅನುಮತಿ ಪತ್ರ.
  • ಬ್ಯಾಂಕ್ ಸ್ಟೇಟ್‌ಮೆಂಟ್: ಕಳೆದ 6 ತಿಂಗಳ ಅಥವಾ 1 ವರ್ಷದ ಉಳಿತಾಯ/ಚಾಲ್ತಿ ಖಾತೆಯ ವಹಿವಾಟಿನ ವಿವರ.
  • ಆದಾಯ ತೆರಿಗೆ ವಿವರ: ಅಸ್ತಿತ್ವದಲ್ಲಿರುವ ಘಟಕಗಳಾಗಿದ್ದರೆ ಕಳೆದ 2-3 ವರ್ಷಗಳ ಐಟಿ ರಿಟರ್ನ್ಸ್ ಫೈಲ್ಸ್.

]]>
Mon, 19 Jan 2026 10:41:25 +0530 shivuagrico
Stree Shakthi package yojane&ಸ್ವಂತ ಉದ್ಯೋಗ ಮಾಡಲು ಸಿಗಲಿದೆ ಕಡಿಮೆ ಬಡ್ಡಿ ದರದಲ್ಲಿ 2 ರಿಂದ 25 ಲಕ್ಷದವರೆಗೆ ಸಾಲಸೌಲಬ್ಯ https://krushirushi.in/Stee-shakthi-package-yojane-2396 https://krushirushi.in/Stee-shakthi-package-yojane-2396 Stree Shakthi package yojane-ಸ್ವಂತ ಉದ್ಯೋಗ ಮಾಡಲು ಸಿಗಲಿದೆ ಕಡಿಮೆ ಬಡ್ಡಿ ದರದಲ್ಲಿ 2 ರಿಂದ 25 ಲಕ್ಷದವರೆಗೆ ಸಾಲಸೌಲಬ್ಯ

ಮಹಿಳಾ ಉದ್ಯಮಿಗಳಿಗೆ ಆರ್ಥಿಕ ನೆರವು ನೀಡಲು ಭಾರತೀಯ ಸ್ಟೇಟ್ ಬ್ಯಾಂಕ್‌ 'ಸ್ತ್ರೀ ಶಕ್ತಿ ಪ್ಯಾಕೇಜ್' ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ 25 ಲಕ್ಷ ರೂ.ವರೆಗೆ ಸಾಲ ಸಿಗಲಿದ್ದು, 10 ಲಕ್ಷ ರೂ.ವರೆಗೆ ಮೇಲಾಧಾರ ರಹಿತ ಸಾಲ ಲಭ್ಯವಿದೆ. ಉತ್ಪಾದನೆ, ಚಿಲ್ಲರೆ ವ್ಯಾಪಾರ ಮತ್ತು ಸೇವಾ ವಲಯಗಳಲ್ಲಿ ಮಹಿಳೆಯರು ತಮ್ಮ ಉದ್ಯಮಗಳನ್ನು ಬೆಳೆಸಲು ಇದು ಉತ್ತಮ ಅವಕಾಶ ನೀಡುತ್ತದೆ. ಈ ಕುರಿತ ವಿವರಗಳು ಇಲ್ಲಿವೆ.

ಭಾರತದಲ್ಲಿ ಮಹಿಳಾ ಉದ್ಯಮಶೀಲತೆಯನ್ನು ಉತ್ತೇಜಿಸಲು ಸರ್ಕಾರ ಮತ್ತು ಬ್ಯಾಂಕುಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಕರ್ನಾಟಕದಲ್ಲಿ ಸ್ತ್ರೀ ಶಕ್ತಿ ಹೆಸರಿನ ಯೋಜನೆಯನ್ನು ನಾವೆಲ್ಲಾ ಕೇಳಿರುತ್ತೇವೆ. ಇದೇ ರೀತಿಯ ಯೋಜನೆಯೊಂದನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್‌ ಬ್ಯಾಂಕ್‌ ಜಾರಿಗೆ ತಂದಿದೆ. ಎಸ್‌ಬಿಐ ಪ್ರಾಯೋಜಿತ 'ಸ್ತ್ರೀ ಶಕ್ತಿ ಪ್ಯಾಕೇಜ್' ಯೋಜನೆ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಮತ್ತು ತಮ್ಮದೇ ಆದ ಉದ್ಯಮವನ್ನು ಪ್ರಾರಂಭಿಸಲು ಅಥವಾ ವಿಸ್ತರಿಸಲು ಈ ಉತ್ತಮ ವೇದಿಕೆಯಾಗಿದೆ. ಈ ಯೋಜನೆಯ ಕುರಿತಾದ ವಿವರಗಳು ಇಲ್ಲಿವೆ.


ಸ್ತ್ರೀ ಶಕ್ತಿ ಪ್ಯಾಕೇಜ್ ಮುಖ್ಯವಾಗಿ ಭಾರತದ ಮಹಿಳಾ ಉದ್ಯಮಿಗಳಿಗೆ ಎಸ್‌ಬಿಐ ನಂತಹ ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳು ನೀಡುವ ಸಾಲ ಯೋಜನೆಯಾಗಿದೆ. ಈ ಯೋಜನೆಯು ಮಹಿಳಾ ಉದ್ಯಮಿಗಳಿಗೆ ಉತ್ಪಾದನೆ, ಚಿಲ್ಲರೆ ವ್ಯಾಪಾರ ಮತ್ತು ಸೇವಾ ವಲಯಗಳಲ್ಲಿ ಹಣಕಾಸಿನ ನೆರವು ನೀಡುವ ಗುರಿಯನ್ನು ಹೊಂದಿದೆ. ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳನ್ನು ಬೆಳೆಸಲು ವ್ಯವಹಾರಗಳಿಗೆ ಕಡಿಮೆ ಬಡ್ಡಿದರದಲ್ಲಿ 25 ಲಕ್ಷ ರೂ.ವರೆಗೆ ಸಾಲ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಇನ್ನೊಂದು ವಿಶೇಷತೆಯೆಂದರೆ, 10 ಲಕ್ಷ ರೂ.ದವರೆಗೆ ಮೇಲಾಧಾರ ರಹಿತ ಸಾಲ ಲಭ್ಯವಾಗಲಿದೆ. ಮಹಿಳಾ ಉದ್ಯಮಿಗಳು ನಡೆಸುವ ವ್ಯವಹಾರಗಳಿಗೆ ತಕ್ಕನಾದ ವಿವಿಧ ರೀತಿಯ ಸಾಲದ ಪ್ಯಾಕೇಜ್‌ಗಳನ್ನು ಈ ಯೋಜನೆ ಒದಗಿಸುತ್ತದೆ. ಈ ಯೋಜನೆಯ ಸೌಲಭ್ಯಗಳನ್ನು ಪಡೆಯಬೇಕಾದರೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಬೆಂಬಲಿಸುವ ಮೂಲಕ ಮಹಿಳೆಯರು ಉದ್ಯಮದ ಕನಿಷ್ಠ 50 ಪ್ರತಿಶತದಷ್ಟು ಮಾಲೀಕತ್ವವನ್ನು ಹೊಂದಿರಬೇಕು.

ಯೋಜನೆಯ ಪ್ರಮುಖ ವೈಶಿಷ್ಟ್ಯಗಳು


ಸಾಲದ ಮೊತ್ತ: ಮಹಿಳಾ ಉದ್ಯಮಿಗಳು ಮತ್ತು ವೃತ್ತಿಪರರು ಈ ಯೋಜನೆಯಡಿ 25 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಪಡೆಯಬಹುದು ಹಾಗೂ ವಿಶೇಷ ಸಂದರ್ಭಗಳಲ್ಲಿ ಈ ಮೊತ್ತವು 50 ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಲ್ಪಡುತ್ತದೆ

ಬಡ್ಡಿ ದರದಲ್ಲಿ ರಿಯಾಯಿತಿ: ಸಾಲದ ಮೊತ್ತವು 2 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿದ್ದರೆ, ಮಹಿಳೆಯರಿಗೆ ಉತ್ತೇಜನ ನೀಡಲು ಬ್ಯಾಂಕ್ ಬಡ್ಡಿ ದರದಲ್ಲಿ ಶೇಕಡಾ 0.5 ರಷ್ಟು ವಿಶೇಷ ರಿಯಾಯಿತಿಯನ್ನು ನೀಡುತ್ತದೆ.

ಶೂನ್ಯ ಭದ್ರತೆ: 10 ಲಕ್ಷ ರೂಪಾಯಿಗಳವರೆಗಿನ ಸಾಲಕ್ಕೆ ಯಾವುದೇ ಆಸ್ತಿ ಅಥವಾ ಶೂರಿಟಿಯನ್ನು ಭದ್ರತೆಯಾಗಿ ನೀಡುವ ಅಗತ್ಯವಿಲ್ಲ, ಏಕೆಂದರೆ ಇದು ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳಿಗೆ ಕ್ರೆಡಿಟ್ ಗ್ಯಾರಂಟಿ ಫಂಡ್ ಟ್ರಸ್ಟ್ (CGTMSE) ಯೋಜನೆಯಡಿ ರಕ್ಷಣೆ ಪಡೆಯುತ್ತದೆ.

ಅರ್ಹ ಕ್ಷೇತ್ರಗಳು: ಈ ಯೋಜನೆಯು ಚಿಲ್ಲರೆ ವ್ಯಾಪಾರ, ಉತ್ಪಾದನಾ ವಲಯ, ಕೃಷಿ ಪೂರಕ ಚಟುವಟಿಕೆಗಳು ಹಾಗೂ ವೈದ್ಯರು, ಚಾರ್ಟರ್ಡ್ ಅಕೌಂಟೆಂಟ್ಸ್ ಮತ್ತು ಬ್ಯೂಟಿ ಪಾರ್ಲರ್ ನಡೆಸುವ ವೃತ್ತಿಪರ ಮಹಿಳೆಯರಿಗೆ ಮುಕ್ತವಾಗಿದೆ.

ಸ್ತ್ರೀ ಶಕ್ತಿ ಯೋಜನೆಯ ವಿವಿಧ ಸಾಲದ ಪ್ಯಾಕೇಜ್‌ಗಳು

ಚಿಲ್ಲರೆ ವ್ಯಾಪಾರದಲ್ಲಿ ತೊಡಗಿರುವ ಮಹಿಳೆಯರು ಕನಿಷ್ಠ 50,000 ರೂ. ರಿಂದ ಗರಿಷ್ಠ 2 ಲಕ್ಷ ರೂ.ದವರೆಗೆ ಸಾಲದ ಸಹಾಯವನ್ನು ಪಡೆಯಬಹುದು.

ವಿವಿಧ ವ್ಯವಹಾರ ಅಥವಾ ಉದ್ಯಮಗಳನ್ನು ನಡೆಸುವ ಮಹಿಳಾ ಉದ್ದಿಮೆದಾರರಿಗೆ 50,000 ರೂ. ರಿಂದ 2 ರೂ. ಲಕ್ಷದವರೆಗಿನ ಸಾಲದ ಮಿತಿಯನ್ನು ನಿಗದಿಪಡಿಸಲಾಗಿದೆ.

ವೈದ್ಯರು, ಚಾರ್ಟರ್ಡ್ ಅಕೌಂಟೆಂಟ್‌ಗಳಂತಹ ವೃತ್ತಿಪರ ಮಹಿಳೆಯರು ತಮ್ಮ ವೃತ್ತಿಜೀವನವನ್ನು ವಿಸ್ತರಿಸಲು ಅಥವಾ ಸ್ಥಾಪಿಸಲು 50,000 ರೂ. ರಿಂದ 25 ಲಕ್ಷ ರೂ.ದವರೆಗೆ ಸಾಲ ಪಡೆಯಲು ಅರ್ಹರಿದ್ದಾರೆ.

ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳನ್ನು ನಡೆಸುವ ಮಹಿಳೆಯರಿಗೆ ಈ ಯೋಜನೆಯಡಿ ಕನಿಷ್ಠ 50,000 ರೂ. ರಿಂದ 25 ಲಕ್ಷ ರೂ.ದವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ.

ಯಾವೆಲ್ಲಾ ಉದ್ಯಮಗಳಿಗೆ ಸಾಲ ಸೌಲಭ್ಯಗಳು ಲಭ್ಯ?

ಸ್ತ್ರೀ ಶಕ್ತಿ ಪ್ಯಾಕೇಜ್‌ ಯೋಜನೆಯು ಕೇವಲ ವ್ಯವಹಾರದಲ್ಲಿ ನೇರವಾಗಿ ತೊಡಗಿಸಿಕೊಂಡಿರುವ ಮಹಿಳೆಯರಿಗಾಗಿ ಮಾತ್ರ ಲಭ್ಯವಿದ್ದು, ದೈನಂದಿನ ವ್ಯಾಪಾರಕ್ಕೆ ಬೇಕಾದ 'ದುಡಿಯುವ ಬಂಡವಾಳ' ಹೆಚ್ಚಿಸಲು ಅಥವಾ ಅಗತ್ಯ ಉಪಕರಣಗಳನ್ನು ಖರೀದಿಸಲು ಈ ಸಾಲವನ್ನು ಬಳಸಬಹುದು.

ಸಿದ್ಧ ಉಡುಪುಗಳ ವಲಯ: ಸಿದ್ಧ ಉಡುಪುಗಳ ತಯಾರಿಕೆ ಅಥವಾ ಬಟ್ಟೆ ವ್ಯಾಪಾರದಲ್ಲಿ ತೊಡಗಿರುವ ಮಹಿಳಾ ಉದ್ಯಮಿಗಳು ತಮ್ಮ ವ್ಯವಹಾರದ ಅಭಿವೃದ್ಧಿಗಾಗಿ ಈ ಯೋಜನೆಯಡಿ ಹೆಚ್ಚಾಗಿ ಸಾಲ ಪಡೆಯುತ್ತಾರೆ.

ಡೈರಿ ಅಥವಾ ಹೈನುಗಾರಿಕೆ ವಲಯ: ಹಾಲು, ಮೊಸರು ಮತ್ತು ಮೊಟ್ಟೆಗಳಂತಹ ಡೈರಿ ಉತ್ಪನ್ನಗಳ ಮಾರಾಟ ಅಥವಾ ಉತ್ಪಾದನೆಯಲ್ಲಿ ತೊಡಗಿರುವ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು.

ಕೃಷಿ ಉತ್ಪನ್ನಗಳು: ಬೀಜಗಳು, ಗೊಬ್ಬರ ಅಥವಾ ಇತರ ಕೃಷಿ ಸಂಬಂಧಿತ ಉತ್ಪನ್ನಗಳ ಮಾರಾಟದಲ್ಲಿ ತೊಡಗಿರುವ ಮಹಿಳಾ ಉದ್ಯಮಿಗಳಿಗೆ ಈ ಯೋಜನೆಯಡಿ ಸಾಲ ಸೌಲಭ್ಯ ಲಭ್ಯವಿದೆ.

ಗೃಹ ಉತ್ಪನ್ನಗಳು: ಬ್ರ್ಯಾಂಡ್ ಇಲ್ಲದ ಸೋಪುಗಳು ಮತ್ತು ಡಿಟರ್ಜೆಂಟ್‌ಗಳ ತಯಾರಿಕೆ ಅಥವಾ ಮಾರಾಟ ಮಾಡುವ ಮಹಿಳೆಯರು ತಮ್ಮ ಆರ್ಥಿಕ ಅಗತ್ಯಗಳಿಗಾಗಿ ಈ ಯೋಜನೆಯನ್ನು ಬಳಸಿಕೊಳ್ಳಬಹುದು.

ಸ್ತ್ರೀ ಶಕ್ತಿ ಪ್ಯಾಕೇಜ್‌ ಯೋಜನೆ ವಿವರ

ಬಡ್ಡಿದರ ಎಷ್ಟು?

ಈ ಯೋಜನೆಯಡಿ ಬಡ್ಡಿ ದರಗಳು ಸಾಲದ ಮೊತ್ತಕ್ಕೆ ಅನುಗುಣವಾಗಿ ಬದಲಾಗುತ್ತವೆ. ವಿವಿಧ ವರ್ಗಗಳಿಗೆ ಅನ್ವಯವಾಗುವಂತೆ ಮಾರ್ಜಿನ್ ಮೊತ್ತದಲ್ಲಿ ಶೇಕಡಾ 5 ರಷ್ಟು ರಿಯಾಯಿತಿಯನ್ನು ನೀಡಲಾಗುತ್ತದೆ.

ಅರ್ಹತಾ ಮಾನದಂಡಗಳೇನು?
ಈ ಯೋಜನೆಯಡಿ ಪ್ರಯೋಜನ ಪಡೆಯಲು, ಉದ್ದಿಮೆಯ ಒಡೆತನದಲ್ಲಿ ಮಹಿಳೆಯರ ಪಾಲು ಕನಿಷ್ಠ 51% ಅಥವಾ ಅದಕ್ಕಿಂತ ಹೆಚ್ಚಿರಬೇಕು. ಅಂದರೆ ಮಹಿಳೆಯು ಆ ಸಂಸ್ಥೆಯ ಪ್ರಮುಖ ಪಾಲುದಾರರಾಗಿರಬೇಕು.

ಯೋಜನೆಯ ಲಾಭ ಪಡೆಯಲು ಉದ್ದಿಮೆಯು ಕೇಂದ್ರ ಸರ್ಕಾರದ ಎಂಎಸ್‌ಎಂಇ ಇಲಾಖೆಯ ಅಡಿಯಲ್ಲಿ ಅಧಿಕೃತವಾಗಿ ನೋಂದಾಯಿಸಲ್ಪಟ್ಟಿರಬೇಕು.

ಸಾಲ ಪಡೆಯುವ ಮಹಿಳೆಯರು ರಾಜ್ಯ ಸರ್ಕಾರದ ವಿವಿಧ ಏಜೆನ್ಸಿಗಳು ಆಯೋಜಿಸುವ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತರಬೇತಿ ಪಡೆದಿರುವುದು ಸಾಲ ಮಂಜೂರಾತಿಗೆ ಹೆಚ್ಚಿನ ಅನುಕೂಲ ಮಾಡಿಕೊಡುತ್ತದೆ.

ಈ ಉದ್ದಿಮೆಯು ಮಹಿಳೆಯರಿಂದಲೇ ನಿರ್ವಹಿಸಲ್ಪಡುತ್ತಿರಬೇಕು ಮತ್ತು ಅವರು ಕಂಪನಿಯ ನಿರ್ದೇಶಕರು ಅಥವಾ ಪಾಲುದಾರರಾಗಿ ಆರ್ಥಿಕ ನಿರ್ಧಾರಗಳಲ್ಲಿ ಪ್ರಮುಖ ಪಾತ್ರ ಹೊಂದಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ಸ್ತ್ರೀ ಶಕ್ತಿ ಪ್ಯಾಕೇಜ್ ಯೋಜನೆಯಡಿ ಸಾಲ ಪಡೆಯಲು ಆಸಕ್ತ ಮಹಿಳೆಯರು ಸಾಮಾನ್ಯವಾಗಿ ಎಸ್‌ಬಿಐನ ಅಧಿಕೃತ ಬ್ಯಾಂಕ್ ಶಾಖೆಗಳಿಗೆ ನೇರವಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಗುರುತಿನ ಚೀಟಿ, ವಿಳಾಸದ ಪುರಾವೆ, ವ್ಯವಹಾರದ ಸಮಗ್ರ ಯೋಜನೆ ಮತ್ತು ಆರ್ಥಿಕ ವರದಿಗಳಂತಹ ಅಗತ್ಯ ದಾಖಲೆಗಳನ್ನು ಬ್ಯಾಂಕಿನ ಮೌಲ್ಯಮಾಪನಕ್ಕಾಗಿ ಸಲ್ಲಿಸುವುದು ಕಡ್ಡಾಯವಾಗಿದೆ. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿದ ನಂತರ, ಬ್ಯಾಂಕ್ ಅಧಿಕಾರಿಗಳು ಉದ್ದಿಮೆಯ ಪರಿಶೀಲನೆ ನಡೆಸಿ ಸಾಲವನ್ನು ಮಂಜೂರು ಮಾಡುತ್ತಾರೆ.

ಬೇಕಾಗುವ ದಾಖಲೆಗಳು

ಗುರುತಿನ ಚೀಟಿ: ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ ಅಥವಾ ಪಾಸ್‌ಪೋರ್ಟ್.

ವಿಳಾಸ ಪುರಾವೆ: ವಿದ್ಯುತ್ ಬಿಲ್ ಅಥವಾ ಟೆಲಿಫೋನ್ ಬಿಲ್

ಉದ್ದಿಮೆಯ ಪುರಾವೆ: ಉದ್ದಿಮೆಯ ನೋಂದಣಿ ಪತ್ರ ಮತ್ತು ಕಳೆದ 3 ವರ್ಷಗಳ ಬ್ಯಾಲೆನ್ಸ್ ಶೀಟ್.

ಯೋಜನಾ ವರದಿ: ವ್ಯವಹಾರದ ಲಾಭ ಮತ್ತು ನಷ್ಟದ ಅಂದಾಜು ವಿವರಗಳು.

]]>
Mon, 19 Jan 2026 08:39:55 +0530 shivuagrico
Baddi sahayadana&ಕೇವಲ 4% ಬಡ್ಡಿ ಸಹಾಯಧನದೊಂದಿಗೆ ಸಿಗಲಿದೆ 1ಕೋಟಿ ಸಾಲಸೌಲಭ್ಯ https://krushirushi.in/Baddi-sahayadana-2395 https://krushirushi.in/Baddi-sahayadana-2395 Baddi sahayadana-ಕೇವಲ 4% ಬಡ್ಡಿ ಸಹಾಯಧನದೊಂದಿಗೆ ಸಿಗಲಿದೆ 1ಕೋಟಿ ಸಾಲಸೌಲಭ್ಯ


ನಿಮ್ಮ ಕನಸಿನ ಸ್ವಂತ ಉದ್ಯಮಕ್ಕೆ ಕರ್ನಾಟಕ ಸರ್ಕಾರದ ಮಹತ್ವದ ಕೊಡುಗೆ. ₹1 ಕೋಟಿ ವರೆಗಿನ ಸಾಲಕ್ಕೆ ಕೇವಲ ಶೇ. 4ರಷ್ಟು ಬಡ್ಡಿ ಮಾತ್ರ ನೀವು ಕಟ್ಟಬೇಕು. ಉಳಿದ ಬಡ್ಡಿಯನ್ನು ಸರ್ಕಾರವೇ ಭರಿಸುತ್ತದೆ. ಕೈಗಾರಿಕೆ, ಐಟಿ, ಆರೋಗ್ಯ, ಪ್ರವಾಸೋದ್ಯಮ ಹೀಗೆ ಯಾವುದೇ ಕ್ಷೇತ್ರದಲ್ಲಿ ನಿಮ್ಮ ಉದ್ಯಮವನ್ನು ಐದು ವರ್ಷದೊಳಗೆ ಸ್ಥಾಪಿಸಿ, ಬೆಳೆಸಿ. ಇದು ನಿಮ್ಮ ಆರ್ಥಿಕ ಸ್ವಾವಲಂಬನೆಗೆ ಸುವರ್ಣಾವಕಾಶ!

ಸ್ವಂತ ಉದ್ಯಮ ಆರಂಭಿಸಿ ಆರ್ಥಿಕವಾಗಿ ಸಬಲರಾಗಲು ನಿಮಗೊಂದು ಸುವರ್ಣಾವಕಾಶ. ಕರ್ನಾಟಕ ಸರ್ಕಾರವು ಪರಿಶಿಷ್ಟ ಪಂಗಡದ ಸಮುದಾಯದ ಅಭ್ಯರ್ಥಿಗಳನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಮತ್ತು ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಲು ವಿಶೇಷ ಬಡ್ಡಿ ಸಹಾಯಧನ ಯೋಜನೆಯನ್ನು ಜಾರಿಗೆ ತಂದಿದೆ. ನೀವು ಹೊಸ ಉದ್ಯಮವನ್ನು ಪ್ರಾರಂಭಿಸಲು ಬಯಸಿದ್ದರೆ ಅಥವಾ ಅಸ್ತಿತ್ವದಲ್ಲಿರುವ ಘಟಕವನ್ನು ವಿಸ್ತರಿಸಲು ಆಲೋಚಿಸುತ್ತಿದ್ದರೆ, ಈ ಯೋಜನೆಯು ನಿಮಗೆ ಭದ್ರ ಬುನಾದಿ ಒದಗಿಸಲಿದೆ. ಈ ಹಿನ್ನೆಲೆಯಲ್ಲಿ ಏನಿದು ಬಡ್ಡಿ ಸಹಾಯಧನ ಯೋಜನೆ? ಈ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ? ಪ್ರಯೋಜನಗಳು ಏನು ಎಂಬುದನ್ನು ತಿಳಿಯೋಣ.

ಕರ್ನಾಟಕ ಸರ್ಕಾರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ಪಂಗಡದ ಉದ್ಯಮಿಗಳ ಆರ್ಥಿಕ ಸಬಲೀಕರಣಕ್ಕಾಗಿ ಈ ವಿಶೇಷ ಬಡ್ಡಿ ಸಹಾಯಧನ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಎಂ.ಎಸ್.ಎಂ.ಇ ಘಟಕಗಳು, ಹೋಟೆಲ್, ಫ್ರಾಂಚೈಸಿ ಅಥವಾ ಡೀಲರ್‌ಶಿಪ್‌ಗಳಂತಹ ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಅಥವಾ ಅಸ್ತಿತ್ವದಲ್ಲಿರುವ ಘಟಕಗಳನ್ನು ಆಧುನೀಕರಿಸಲು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಥವಾ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್‌ಗಳಿಂದ ಪಡೆಯುವ ಗರಿಷ್ಠ ರೂ. 1.00 ಕೋಟಿ ವರೆಗಿನ ಸಾಲಕ್ಕೆ ಕೇವಲ 4% ರಿಯಾಯಿತಿ ಬಡ್ಡಿ ದರವನ್ನು ನಿಗದಿಪಡಿಸಲಾಗಿದೆ (ಉಳಿದ ಬಡ್ಡಿಯನ್ನು ಸರ್ಕಾರವೇ ಭರಿಸುತ್ತದೆ). ಉದ್ಯಮದ ಸಂಪೂರ್ಣ ಮಾಲೀಕತ್ವವು ಎಸ್‌ಟಿ ಸಮುದಾಯದವರದ್ದೇ ಆಗಿರಬೇಕು ಎಂಬ ಷರತ್ತಿನೊಂದಿಗೆ, ಪಡೆದ ಸಾಲವನ್ನು 5 ವರ್ಷಗಳ ಅವಧಿಯಲ್ಲಿ ಮರುಪಾವತಿಸಲು ಅವಕಾಶವಿದ್ದು, ಇದು ಸಮುದಾಯದ ಯುವ ಉದ್ಯಮಿಗಳು ಕಡಿಮೆ ಬಂಡವಾಳ ವೆಚ್ಚದಲ್ಲಿ ಸ್ವಾವಲಂಬಿಗಳಾಗಲು ಅತ್ಯುತ್ತಮ ವೇದಿಕೆಯಾಗಿದೆ

ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಕೈಗೆಟುಕುವ ದರದಲ್ಲಿ ಬಂಡವಾಳ ಒದಗಿಸುವುದು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಉತ್ತೇಜಿಸುವುದು ಮತ್ತು ಸೇವಾ ವಲಯಗಳಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ

ಬಡ್ಡಿ ದರದ ರಿಯಾಯಿತಿ: ಈ ಯೋಜನೆಯಡಿ ಆಯ್ಕೆಯಾದ ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಕೇವಲ 4% ರಷ್ಟು ರಿಯಾಯಿತಿ ಬಡ್ಡಿ ದರದಲ್ಲಿ ಸಾಲದ ಸೌಲಭ್ಯ ದೊರೆಯುತ್ತದೆ. ಬ್ಯಾಂಕಿನ ಅಸಲಿ ಬಡ್ಡಿ ದರ ಮತ್ತು ಈ 4% ನಡುವಿನ ವ್ಯತ್ಯಾಸದ ಮೊತ್ತವನ್ನು ಸರ್ಕಾರವೇ ಬಡ್ಡಿ ಸಹಾಯಧನದ ರೂಪದಲ್ಲಿ ಭರಿಸುತ್ತದೆ.

ಗರಿಷ್ಠ ಸಾಲದ ಮಿತಿ: ಉದ್ಯಮಿಗಳು ತಮ್ಮ ಘಟಕಗಳ ಸ್ಥಾಪನೆ ಅಥವಾ ವಿಸ್ತರಣೆಗಾಗಿ ಈ ಯೋಜನೆಯ ಅಡಿಯಲ್ಲಿ ಗರಿಷ್ಠ 1.00 ಕೋಟಿ ರೂಪಾಯಿಗಳವರೆಗೆ ಸಾಲವನ್ನು ಪಡೆಯಲು ಅವಕಾಶವಿದೆ.


ಸಾಲ ಮರುಪಾವತಿಯ ಕಾಲಾವಕಾಶ: ಪಡೆದ ಸಾಲವನ್ನು ಮರುಪಾವತಿ ಮಾಡಲು ಉದ್ಯಮಿಗಳಿಗೆ 5 ವರ್ಷಗಳ ಕಾಲಾವಧಿಯನ್ನು ನಿಗದಿಪಡಿಸಲಾಗಿದೆ. ಈ ಅವಧಿಯಲ್ಲಿ ನಿಗದಿತ ಕಂತುಗಳ ಮೂಲಕ ಸಾಲ ತೀರಿಸಬಹುದಾಗಿದೆ.

ಸಾಲ ಒದಗಿಸುವ ಹಣಕಾಸು ಸಂಸ್ಥೆಗಳು: ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಉದ್ಯಮಿಗಳು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ , ಯಾವುದಾದರು ರಾಷ್ಟ್ರೀಕೃತ ಬ್ಯಾಂಕ್‌ಗಳು, ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್‌ಗಳು ಅಥವಾ ಅಪೆಕ್ಸ್ ಸಹಕಾರಿ ಬ್ಯಾಂಕ್‌ಗಳಿಂದ ಸಾಲವನ್ನು ಪಡೆಯಬಹುದಾಗಿದೆ.

ಕೈಗಾರಿಕಾ ವಲಯ: ಆಹಾರ ಸಂಸ್ಕರಣಾ ಘಟಕಗಳು, ಜವಳಿ ಉದ್ಯಮ, ಸಿದ್ಧ ಉಡುಪುಗಳ ತಯಾರಿಕೆ, ಎಂಜಿನಿಯರಿಂಗ್ ವರ್ಕ್‌ಶಾಪ್‌ಗಳು ಮತ್ತು ಆಟೋಮೊಬೈಲ್ ಬಿಡಿಭಾಗಗಳ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಈ ಯೋಜನೆಯಡಿ ಸಾಲ ಪಡೆಯಬಹುದು.

ಮಾಹಿತಿ ತಂತ್ರಜ್ಞಾನ ಮತ್ತು ಸೇವಾ ವಲಯ: ಸಾಫ್ಟ್‌ವೇರ್ ಅಭಿವೃದ್ಧಿ ಕೇಂದ್ರಗಳು, ಐಟಿ ಆಧಾರಿತ ಸೇವೆಗಳು ಹಾಗೂ ಈವೆಂಟ್ ಮ್ಯಾನೇಜ್‌ಮೆಂಟ್‌ನಂತಹ ಸೇವಾ ಆಧಾರಿತ ಉದ್ಯಮಗಳಿಗೆ ಸರ್ಕಾರವು ಪ್ರೋತ್ಸಾಹ ನೀಡುತ್ತದೆ.

ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳು: 2021-22ನೇ ಸಾಲಿನಿಂದ ಈ ಯೋಜನೆಯನ್ನು ವಿಸ್ತರಿಸಲಾಗಿದ್ದು, ಇದರ ಅಡಿಯಲ್ಲಿ ಸ್ವಂತ ಮಳಿಗೆ, ಪ್ರಮುಖ ಕಂಪನಿಗಳ ಡೀಲರ್‌ಶಿಪ್, ಫ್ರಾಂಚೈಸಿಗಳು ಮತ್ತು ಹೋಟೆಲ್ ಉದ್ಯಮಗಳನ್ನು ಆರಂಭಿಸಲು ಅವಕಾಶ ಕಲ್ಪಿಸಲಾಗಿದೆ.

ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರ: ಸುಸಜ್ಜಿತ ಆಸ್ಪತ್ರೆಗಳು, ನರ್ಸಿಂಗ್ ಹೋಮ್‌ಗಳು, ಸ್ಕ್ಯಾನಿಂಗ್ ಅಥವಾ ಡಯಾಗ್ನೋಸ್ಟಿಕ್ ಸೆಂಟರ್‌ಗಳು, ದಂತ ಚಿಕಿತ್ಸಾಲಯ ಮತ್ತು ಕಣ್ಣಿನ ಆಸ್ಪತ್ರೆಗಳನ್ನು ತೆರೆಯಲು ಹಾಗೂ ಆಧುನಿಕ ವೈದ್ಯಕೀಯ ಉಪಕರಣಗಳ ಖರೀದಿಗೆ ಸಹಾಯಧನ ಲಭ್ಯವಿದೆ.

ಪ್ರವಾಸೋದ್ಯಮ ಮತ್ತು ಆತಿಥ್ಯ ವಲಯ: ಪ್ರವಾಸಿಗರನ್ನು ಸೆಳೆಯಲು ಹೋಟೆಲ್, ರೆಸಾರ್ಟ್, ಕ್ಯಾಟರಿಂಗ್ ಸೇವೆಗಳು, ಅಮ್ಯೂಸ್‌ಮೆಂಟ್ ಪಾರ್ಕ್‌ಗಳು ಮತ್ತು ಪ್ರವಾಸಿ ಏಜೆನ್ಸಿಗಳನ್ನು ನಡೆಸಲು ಆಸಕ್ತಿಯಿರುವ ಉದ್ಯಮಿಗಳು ಈ ಯೋಜನೆಯ ಲಾಭ ಪಡೆಯಬಹುದು.

ಉದ್ಯಮವು ಸಂಪೂರ್ಣವಾಗಿ ಪರಿಶಿಷ್ಟ ಪಂಗಡದ ವ್ಯಕ್ತಿಗಳ ಮಾಲೀಕತ್ವದಲ್ಲಿರಬೇಕು. ಪಾಲುದಾರಿಕೆ ಸಂಸ್ಥೆಯಾಗಿದ್ದರೆ, ಎಲ್ಲಾ ಪಾಲುದಾರರು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದವರಾಗಿರಬೇಕು.

ಅರ್ಜಿದಾರರು ಈ ಹಿಂದೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಥವಾ ಯಾವುದೇ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಮರುಪಾವತಿ ಮಾಡದೆ ಸುಸ್ತಿದಾರರಾಗಿರಬಾರದು.

ಈ ಹಿಂದೆ ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಬಡ್ಡಿ ಸಹಾಯಧನ ಯೋಜನೆಯಡಿ ಪ್ರಯೋಜನ ಪಡೆದಿದ್ದರೆ ಈ ಯೋಜನೆಗೆ ಅರ್ಹರಲ್ಲ.

ಹಂತ 1: ನಿಮ್ಮ ಜಿಲ್ಲೆಯ ಹತ್ತಿರದ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಶಾಖಾ ಕಚೇರಿ ಅಥವಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡಿ.

ಹಂತ 2: ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಎಲ್ಲಾ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ.

ಹಂತ 3: ಅಗತ್ಯವಿರುವ ದಾಖಲೆಗಳ ಸ್ವಯಂ ದೃಢೀಕರಿಸಿದ ಪ್ರತಿಗಳನ್ನು ಲಗತ್ತಿಸಿ.

ಹಂತ 4: ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ಕಚೇರಿಯಲ್ಲಿ ಸಲ್ಲಿಸಿ ಮತ್ತು ಸ್ವೀಕೃತಿ ಪತ್ರ ಪಡೆಯಿರಿ.

ದಾಖಲೆಗಳು

ಅರ್ಜಿದಾರರ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಫೋಟೋ.

ಜಾತಿ ಪ್ರಮಾಣಪತ್ರ (SC/ST ಧೃಢೀಕರಣ).

ಬಯೋ-ಡೇಟಾ ಮತ್ತು ನಿವ್ವಳ ಮೌಲ್ಯದ ಹೇಳಿಕೆ.

ನಿಗದಿತ ನಮೂನೆಯಲ್ಲಿ ಪ್ರಮಾಣಪತ್ರ.

ಬ್ಯಾಂಕ್ ಖಾತೆಯ ವಿವರಗಳು.

ಹೆಚ್ಚಿನ ಮಾಹಿತಿಗಾಗಿ ಅಥವಾ ಯಾವುದೇ ಸಂದೇಹಗಳಿದ್ದಲ್ಲಿ ನಿಮ್ಮ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಸಹಾಯವಾಣಿ ಸಂಖ್ಯೆ: 080-22261703 ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದು.

Bele sala baddi manna-ಈ ಯೋಜನೆಯಡಿ ಸಿಗಲಿದೆ ನಿಮ್ಮ ಸಾಲದ ಮೇಲೆ 3% ಬಡ್ಡಿ ಮನ್ನಾ,ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

https://krushirushi.in/Bele-sala-baddi-manna-1905

]]>
Sun, 18 Jan 2026 20:11:33 +0530 shivuagrico
Government plots&ಸರ್ಕಾರದಿಂದ ಕೇವಲ 9.7 to 10.5 ಲಕ್ಷಕ್ಕೆ 1 BHK ಫ್ಲಾಟ್ https://krushirushi.in/Government-plots-2394 https://krushirushi.in/Government-plots-2394 Government plots-ಸರ್ಕಾರದಿಂದ ಕೇವಲ 9.7 to 10.5 ಲಕ್ಷಕ್ಕೆ 1 BHK ಫ್ಲಾಟ್

ಸಿಲಿಕಾನ್ ಸಿಟಿಯಲ್ಲಿ ತಿಂಗಳ ಪೂರ್ತಿ ದುಡಿದ ಸಂಬಳದಲ್ಲಿ ಅರ್ಧದಷ್ಟು ಹಣ ಮನೆ ಬಾಡಿಗೆಗೇ (House Rent) ಖಾಲಿಯಾಗುತ್ತಿದೆಯೇ? ನಮಗೂ ಒಂದು ಸ್ವಂತ ಸೂರು ಸಿಗಲಾರದೇ? ಎಂಬ ಹಂಬಲ ನಿಮ್ಮದಾಗಿದ್ದರೆ ಇಲ್ಲಿದೆ ನಿಮಗಾಗಿ ಒಂದು ಸುವರ್ಣ ಅವಕಾಶ. ಹೌದು ಬೆಂಗಳೂರಿನಲ್ಲಿ ಊಹಿಸಲೂ ಸಾಧ್ಯವಾಗದ ಬೆಲೆಗೆ ಅಂದರೆ ಕೇವಲ ₹9.70 ಲಕ್ಷಕ್ಕೆ ಸುಸಜ್ಜಿತ 1 BHK ಫ್ಲಾಟ್ ಅನ್ನು ನಿಮ್ಮದಾಗಿಸಿಕೊಳ್ಳಬಹುದು!
ಮುಖ್ಯಮಂತ್ರಿಗಳ ಒಂದು ಲಕ್ಷ ಮನೆ ಯೋಜನೆ?
ಬೆಂಗಳೂರಿನ ಗಗನಕ್ಕೇರಿರುವ ರಿಯಲ್ ಎಸ್ಟೇಟ್ ಬೆಲೆಗಳ ನಡುವೆ ಬಡವರು ಮತ್ತು ಮಧ್ಯಮ ವರ್ಗದವರ ಸ್ವಂತ ಮನೆಯ ಕನಸನ್ನು ನನಸಾಗಿಸಲು ಕರ್ನಾಟಕ ಸರ್ಕಾರವು ಈ ಮಾದರಿ ಯೋಜನೆಯನ್ನು ತಂದಿದೆ. ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ನಗರದ ವಿವಿಧ ಭಾಗಗಳಲ್ಲಿ ಸುಸಜ್ಜಿತ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಲಾಗಿದ್ದು ಸಬ್ಸಿಡಿ ದರದಲ್ಲಿ ಇವುಗಳನ್ನು ಹಂಚಿಕೆ ಮಾಡಲಾಗುತ್ತಿದೆ.
ಸಹಾಯವಾಣಿ (Helpline): ಯಾವುದೇ ಗೊಂದಲವಿದ್ದರೆ ವಾಟ್ಸಾಪ್ ಮೂಲಕ ಮಾಹಿತಿ ಪಡೆಯಬಹುದು: 9739774666
ಫ್ಲಾಟ್‌ಗಳ ಬೆಲೆ ವಿವರ: ಯಾರಿಗೆ ಎಷ್ಟು?
ಮಾರುಕಟ್ಟೆ ದರಕ್ಕಿಂತ ಅತಿ ಕಡಿಮೆ ಬೆಲೆಗೆ ಇಲ್ಲಿ ಮನೆಗಳು ಲಭ್ಯವಿವೆ:
ಪರಿಶಿಷ್ಟ ಜಾತಿ ಮತ್ತು ಪಂಗಡ (SC/ST): ₹9.70 ಲಕ್ಷ.
ಸಾಮಾನ್ಯ ಮತ್ತು ಇತರೆ ವರ್ಗ (General/OBC): ₹10.50 ಲಕ್ಷ.
ಈ ಹಣವನ್ನು ಒಮ್ಮೆಲೆ ಪಾವತಿಸಲು ಕಷ್ಟವಾದರೆ, ಬ್ಯಾಂಕ್‌ಗಳ ಮೂಲಕ ಸುಲಭವಾಗಿ ಹೋಮ್ ಲೋನ್ (Home Loan) ಪಡೆಯುವ ಸೌಲಭ್ಯವನ್ನೂ ಸರ್ಕಾರವೇ ಒದಗಿಸಲಿದೆ.
ಈ ಮನೆ ಪಡೆಯಲು ನೀವು ಅರ್ಹರೇ?
ಈ ಯೋಜನೆಯಡಿ ಅರ್ಜಿ ಸಲ್ಲಿಸಲು ನೀವು ಈ ಕೆಳಗಿನ ಮಾನದಂಡಗಳನ್ನು ಪೂರೈಸಬೇಕು:
ಕುಟುಂಬದ ವಾರ್ಷಿಕ ಆದಾಯ ₹3 ಲಕ್ಷದ ಒಳಗೆ ಇರಬೇಕು.
ಕಳೆದ ಕನಿಷ್ಠ 5 ವರ್ಷಗಳಿಂದ ಬೆಂಗಳೂರಿನಲ್ಲೇ ವಾಸವಾಗಿರಬೇಕು.
ಬೆಂಗಳೂರು ಅಥವಾ ರಾಜ್ಯದ ಯಾವುದೇ ಭಾಗದಲ್ಲಿ ಅರ್ಜಿದಾರರ ಹೆಸರಿನಲ್ಲಿ ಸ್ವಂತ ಮನೆ ಇರಬಾರದು.
ಕ್ಯಾಬ್/ಆಟೋ ಚಾಲಕರು, ಗಾರ್ಮೆಂಟ್ಸ್ ಕೆಲಸಗಾರರು, ಬೀದಿ ಬದಿ ವ್ಯಾಪಾರಿಗಳು ಮತ್ತು ಮನೆ ಕೆಲಸದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳು:
ಆಧಾರ್ ಕಾರ್ಡ್ (Aadhaar Card)
ಪಡಿತರ ಚೀಟಿ (BPL/APL Card)
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಬೆಂಗಳೂರಿನಲ್ಲಿ 5 ವರ್ಷ ವಾಸವಿರುವ ಬಗ್ಗೆ ದೃಢೀಕರಣ
ಬ್ಯಾಂಕ್ ಪಾಸ್ ಬುಕ್ ವಿವರ
ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ
ಬೆಂಗಳೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಲಭ್ಯವಿರುವ ಫ್ಲಾಟ್‌ಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ಹಂತ-ಹಂತದ ಮಾಹಿತಿ ಇಲ್ಲಿದೆ.
ಕ್ಷೇತ್ರವಾರು ಫ್ಲಾಟ್‌ಗಳ ಲಭ್ಯತೆಯ ವಿವರಯಾವ ಕ್ಷೇತ್ರದಲ್ಲಿ ಎಷ್ಟು ಮನೆಗಳು ನಿರ್ಮಾಣವಾಗಿವೆ ಮತ್ತು ಪ್ರಸ್ತುತ ಎಷ್ಟು ಲಭ್ಯವಿವೆ ಎಂಬ ಪಟ್ಟಿ ಇಲ್ಲಿದೆ:
ವಿಧಾನಸಭಾ ಕ್ಷೇತ್ರಒಟ್ಟು ಮನೆಗಳು ಸದ್ಯ ಲಭ್ಯವಿರುವ ಫ್ಲಾಟ್‌ಗಳು
ವಿಧಾನಸಭಾ ಕ್ಷೇತ್ರ ಒಟ್ಟು ನಿರ್ಮಿಸಿದ ಮನೆಗಳು ಸದ್ಯ ಲಭ್ಯವಿರುವ ಫ್ಲಾಟ್‌ಗಳು ಸ್ಥಿತಿ (Status)
ಯಲಹಂಕ 14,820 8,372 ಅತಿ ಹೆಚ್ಚು ಲಭ್ಯ
ಯಶವಂತಪುರ 12,377 7,894 ಹೆಚ್ಚು ಲಭ್ಯ
ಮಹದೇವಪುರ 4,199 2,976 ಅವಕಾಶವಿದೆ
ಆನೇಕಲ್ 4,044 2,683 ಅವಕಾಶವಿದೆ
ಬ್ಯಾಟರಾಯನಪುರ 1,943 1,012 ಮಧ್ಯಮ ಲಭ್ಯತೆ
ಕೃಷ್ಣರಾಜಪುರಂ (KR Puram) 576 273 ಕಡಿಮೆ ಲಭ್ಯತೆ
ದಾಸರಹಳ್ಳಿ 1,132 118 ಶೀಘ್ರವೇ ಭರ್ತಿ
ಬೆಂಗಳೂರು ದಕ್ಷಿಣ 579 44 ಅಂತಿಮ ಹಂತ
ಬೆಂಗಳೂರಿನಲ್ಲಿ ಸ್ವಂತ ಮನೆ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?
ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮೊದಲಿಗೆ ರಾಜೀವ್ ಗಾಂಧಿ ವಸತಿ ನಿಗಮದ ಅಧಿಕೃತ ಪೋರ್ಟಲ್ www.ashraya.karnataka.gov.in ಗೆ ಭೇಟಿ ನೀಡಿ. ಮುಖಪುಟದಲ್ಲಿ ಬೆಂಗಳೂರು 1 ಲಕ್ಷ ಬಹುಮಹಡಿ ಮನೆ ಯೋಜನೆ ಲಿಂಕ್ ಕ್ಲಿಕ್ ಮಾಡಿ.
ಇಲ್ಲಿ ನಿಮಗೆ ಎರಡು ಆಯ್ಕೆಗಳಿರುತ್ತವೆ. ನೀವು ಸದ್ಯ ವಾಸವಿರುವ ವಿಧಾನಸಭಾ ಕ್ಷೇತ್ರದಲ್ಲೇ ಮನೆ ಬೇಕಿದ್ದರೆ ಸ್ಥಳೀಯ ಕ್ಷೇತ್ರದವರಿಗೆ ಎಂದು ಆಯ್ಕೆ ಮಾಡಿ. ಒಂದು ವೇಳೆ ಬೇರೆ ಕ್ಷೇತ್ರದಲ್ಲಿ ಮನೆ ಬೇಕಿದ್ದರೆ ಸಾರ್ವಜನಿಕರಿಗೆ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ
ನಿಮ್ಮ ವಲಯ (Zone), ವಾರ್ಡ್ ಸಂಖ್ಯೆ, ನಿಖರವಾದ ವಿಳಾಸ ಮತ್ತು ಏರಿಯಾದ ಪಿನ್ ಕೋಡ್ ಅನ್ನು ಯಾವುದೇ ತಪ್ಪುಗಳಿಲ್ಲದೆ ನಮೂದಿಸಿ.
ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಹೆಸರನ್ನು (ಆಧಾರ್‌ನಲ್ಲಿರುವಂತೆಯೇ) ನಮೂದಿಸಿ.
ನಂತರ ಪಡಿತರ ಚೀಟಿ (Ration Card) ಸಂಖ್ಯೆಯನ್ನು ಹಾಕಿ. ಮನೆಯ ಸದಸ್ಯರ ಪಟ್ಟಿಯಲ್ಲಿ ಯಾರ ಹೆಸರಿನಲ್ಲಿ ಫ್ಲಾಟ್ ನೋಂದಣಿಯಾಗಬೇಕೋ ಅವರ ಹೆಸರನ್ನು ಆಯ್ಕೆ ಮಾಡಿ.
ನಿಮ್ಮ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ RD ಸಂಖ್ಯೆಯನ್ನು ನಮೂದಿಸಿ. ನೆನಪಿಡಿ, ನಿಮ್ಮ ವಾರ್ಷಿಕ ಕುಟುಂಬ ಆದಾಯ 3 ಲಕ್ಷ ರೂಪಾಯಿ ಮೀರಿದ್ದರೆ ಅರ್ಜಿ ಸ್ವೀಕೃತವಾಗುವುದಿಲ್ಲ.
ನಿಮ್ಮ ಆಧಾರ್ ಕಾರ್ಡ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ವಿವರಗಳನ್ನು ನೀಡಿ. ಜೊತೆಗೆ ನೀವು ಮಾಡುವ ಉದ್ಯೋಗದ (ಉದಾ: ಆಟೋ ಚಾಲಕರು, ಗಾರ್ಮೆಂಟ್ಸ್ ನೌಕರರು ಇತ್ಯಾದಿ) ಮಾಹಿತಿಯನ್ನು ಭರ್ತಿ ಮಾಡಿ
ಎಲ್ಲಾ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ Save ಬಟನ್ ಒತ್ತಿ. ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ OTP ನಮೂದಿಸಿ ಅರ್ಜಿಯನ್ನು ಸಲ್ಲಿಸಿ. ಕೊನೆಯಲ್ಲಿ ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ ಅರ್ಜಿ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
]]>
Sun, 18 Jan 2026 14:06:22 +0530 shivuagrico
Bele parihara list 2026&ಇಲ್ಲಿಯವರೆಗೂ ಬೆಳೆ ಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ,ನಿಮಗೇಷ್ಟು ಜಮಾ ಚೆಕ್ ಮಾಡಿ https://krushirushi.in/Bele-parihara-list-2026 https://krushirushi.in/Bele-parihara-list-2026 Bele parihara list 2026-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು.


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Sun, 18 Jan 2026 08:00:23 +0530 shivuagrico
Budget 2026&ಬಜೇಟ್ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿಸುದ್ದಿ ಕೊಟ್ಟ ಕೇಂದ್ರ ಸರ್ಕಾರ,ಪಿಎಂ ಕಿಸಾನ್ ಹಣ ಹೆಚ್ಚಳ ಸೇರಿದಂತೆ ಏನೇಲ್ಲ ಸಿಗಲಿವೆ https://krushirushi.in/Budget-2026 https://krushirushi.in/Budget-2026 Budget 2026-ಬಜೇಟ್ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿಸುದ್ದಿ ಕೊಟ್ಟ ಕೇಂದ್ರ ಸರ್ಕಾರ,ಪಿಎಂ ಕಿಸಾನ್ ಹಣ ಹೆಚ್ಚಳ ಸೇರಿದಂತೆ ಏನೇಲ್ಲ ಸಿಗಲಿವೆ

ಫೆಬ್ರವರಿ 1 ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್‌ನಲ್ಲಿ 'ಪಿಎಂ ಕಿಸಾನ್' ಯೋಜನೆಯ ಸಹಾಯಧನ ವಾರ್ಷಿಕ 6,000 ರೂ. ನಿಂದ 8,000 ರೂ.ಗೆ ಏರಿಸುವ ಸಾಧ್ಯತೆಯಿದೆ. ಏರುತ್ತಿರುವ ಕೃಷಿ ವೆಚ್ಚಗಳಿಂದ ಕಂಗಾಲಾಗಿರುವ ರೈತರು ಈ ಹೆಚ್ಚಳವನ್ನು ನಿರೀಕ್ಷಿಸುತ್ತಿದ್ದಾರೆ. ವಿಶೇಷವಾಗಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ತವರು ರಾಜ್ಯವಾದ ಮಧ್ಯಪ್ರದೇಶದ ರೈತರು ಬೆಂಬಲ ಬೆಲೆ ಏರಿಕೆ, ಸಕಾಲಿಕ ವಿಮೆ ಮತ್ತು ಸಾಲ ಮನ್ನಾಗಾಗಿ ಆಗ್ರಹಿಸುತ್ತಿದ್ದಾರೆ.

ಮುಂಬರುವ ಕೇಂದ್ರ ಬಜೆಟ್ ಅಧಿವೇಶನಕ್ಕೆ ದಿನಗಣನೆ ಆರಂಭವಾಗಿದೆ. ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿರುವ ಬಜೆಟ್ ಮೇಲೆ ದೇಶದ ಅನ್ನದಾತರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ವಿಶೇಷವಾಗಿ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ' ಯೋಜನೆಯಡಿ ರೈತರಿಗೆ ನೀಡಲಾಗುವ ವಾರ್ಷಿಕ ಸಹಾಯಧನವನ್ನು ಹೆಚ್ಚಿಸಲಾಗುತ್ತದೆಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

ಪಿಎಂ ಕಿಸಾನ್ ಹಣ ಏರಿಕೆ ಸಾಧ್ಯತೆ

ಪ್ರಸ್ತುತ ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕ 6,000 ರೂ. ಸಹಾಯಧನವನ್ನು ಮೂರು ಕಂತುಗಳಲ್ಲಿ (ತಲಾ 2,000 ರೂ.) ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತಿದೆ. ಆದರೆ, ಏರುತ್ತಿರುವ ಬೆಲೆಗಳು ಮತ್ತು ಕೃಷಿ ವೆಚ್ಚಗಳ ಹಿನ್ನೆಲೆಯಲ್ಲಿ ಈ ಮೊತ್ತ ಸಾಲುತ್ತಿಲ್ಲ ಎಂಬುದು ರೈತ ಸಂಘಟನೆಗಳ ವಾದ. ಹೀಗಾಗಿ, ಈ ಬಾರಿಯ ಬಜೆಟ್‌ನಲ್ಲಿ ಈ ಮೊತ್ತವನ್ನು ವಾರ್ಷಿಕ 8,000 ರೂ. ಗಳಿಗೆ ಹೆಚ್ಚಿಸುವಂತೆ ಬಲವಾದ ಬೇಡಿಕೆ ಕೇಳಿಬಂದಿದೆ.

ಸರ್ಕಾರದಿಂದ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಹೊರಬೀಳದಿದ್ದರೂ, ಬಜೆಟ್‌ನಲ್ಲಿ ಈ ಬಗ್ಗೆ ಸಿಹಿ ಸುದ್ದಿ ಸಿಗಬಹುದು ಎಂಬ ನಿರೀಕ್ಷೆ ರೈತರಲ್ಲಿದೆ. 2018 ರಲ್ಲಿ ಆರಂಭವಾದ ಈ ಯೋಜನೆ ಕೋಟ್ಯಂತರ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆಸರೆಯಾಗಿದೆ.

ಇತ್ತೀಚಿನ ವರ್ಷಗಳಲ್ಲಿ ರಸಗೊಬ್ಬರ, ಬೀಜ, ಕೀಟನಾಶಕ, ಡೀಸೆಲ್ ಮತ್ತು ಕೃಷಿ ಉಪಕರಣಗಳ ಬೆಲೆ ಗಗನಕ್ಕೇರಿದೆ. ಕೇವಲ 6,000 ರೂ. ರೈತರಿಗೆ ಯಾವ ಮೂಲೆಗೂ ಸಾಲುತ್ತಿಲ್ಲ. ಹೀಗಾಘಿ ಸಹಾಯಧನ ಹೆಚ್ಚಾದರೆ, ರೈತರು ಕೃಷಿಯಲ್ಲಿ ಹೂಡಿಕೆ ಮಾಡಲು ಮತ್ತು ಸಾಲದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂಬುದು ತಜ್ಞರ ಅಭಿಪ್ರಾಯ.

ನಿರೀಕ್ಷೆಯ ಮೂಟೆಯನ್ನೇ ಹೊತ್ತಿದ್ದಾರೆ ಮಧ್ಯಪ್ರದೇಶ ರೈತರು

ದೇಶದ ಕೃಷಿ ಭೂಪಟದಲ್ಲಿ ಮಧ್ಯಪ್ರದೇಶಕ್ಕೆ ಪ್ರಮುಖ ಸ್ಥಾನವಿದೆ. ಗೋಧಿ, ಸೋಯಾಬಿನ್, ಬೇಳೆಕಾಳು ಮತ್ತು ಮಸಾಲೆ ಪದಾರ್ಥಗಳ ಉತ್ಪಾದನೆಯಲ್ಲಿ ಅಗ್ರಗಣ್ಯವಾಗಿರುವ ಈ ರಾಜ್ಯದ ರೈತರು ಬಜೆಟ್ ಮೇಲೆ ಹೆಚ್ಚಿನ ಭರವಸೆ ಇಟ್ಟಿದ್ದಾರೆ. ಅದಕ್ಕೆ ಮತ್ತೊಂದು ಕಾರಣವೆಂದರೆ, ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರು ಇದೇ ರಾಜ್ಯದ ಸೆಹೋರ್ ಜಿಲ್ಲೆಯವರು.

ಸೆಹೋರ್ ಜಿಲ್ಲೆಯು 'ಶರಬತಿ ಗೋಧಿ'ಗೆ ಹೆಸರುವಾಸಿ. ಆದರೆ ಇಲ್ಲಿನ ರೈತರು ತಮ್ಮ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿದ್ದಾರೆ. "ನಮ್ಮ ಬೆಳೆಗಳಿಗೆ ಬೆಂಬಲ ಬೆಲೆ (ಎಂಎಸ್‌ಪಿ) ಸಿಗುತ್ತಿಲ್ಲ. ಈರುಳ್ಳಿ ಬೆಲೆ ಕುಸಿದು ಹೊಲದಲ್ಲೇ ಕೊಳೆಯುತ್ತಿದೆ. ವಿಮೆ ಹಣ ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ," ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಹೀಗಾಗಿ ನಮ್ಮದೇ ರಾಜ್ಯದ ಸಚಿವರು ಬೇಡಿಕೆ ಈಡೇರಿಸಬಹುದು ಎಂಬ ನಿರೀಕ್ಷೆಯಲ್ಲಿ ಇಲ್ಲಿನ ಅನ್ನದಾತರಿದ್ದಾರೆ.

ರೈತರ ಪ್ರಮುಖ ಬೇಡಿಕೆಗಳೇನು?

 

  • ಬೆಂಬಲ ಬೆಲೆ ಏರಿಕೆ: ಗೋಧಿಗೆ ಕ್ವಿಂಟಾಲ್‌ಗೆ 3,500-4,000 ರೂ. ಮತ್ತು ಸೋಯಾಬಿನ್‌ಗೆ 5,000-6,000 ರೂ. ಬೆಲೆ ನಿಗದಿಪಡಿಸಬೇಕು.
  • ಸಾಲ ಮನ್ನಾ: ಸಾಲದ ಸುಳಿಯಲ್ಲಿ ಸಿಲುಕಿರುವ ರೈತರಿಗೆ ಸಾಲ ಮನ್ನಾ ಮಾಡುವ ಮೂಲಕ ನೆರವಾಗಬೇಕು.
  • ಸಮರ್ಪಕ ವಿಮೆ: ಬೆಳೆ ನಷ್ಟವಾದಾಗ ವಿಮಾ ಪರಿಹಾರ ನೇರವಾಗಿ ಮತ್ತು ತ್ವರಿತವಾಗಿ ರೈತರಿಗೆ ತಲುಪಬೇಕು.
  • ಪಿಎಂ ಕಿಸಾನ್ ಹೆಚ್ಚಳ: ವಾರ್ಷಿಕ ಸಹಾಯಧನ ಏರಿಕೆಯಾಗಬೇಕು.


ಮಧ್ಯಪ್ರದೇಶ ಸರ್ಕಾರ 2026 ಅನ್ನು 'ರೈತ ಕಲ್ಯಾಣ ವರ್ಷ' ಎಂದು ಘೋಷಿಸಿದ್ದರೂ, ಯೋಜನೆಗಳು ಕೇವಲ ಕಾಗದದ ಮೇಲಿರದೆ ರೈತರ ಕೈ ಸೇರಬೇಕು ಎಂಬುದು ಅನ್ನದಾತರ ಒತ್ತಾಯವಾಗಿದೆ. ಬಜೆಟ್ ಕೇವಲ ಅಂಕಿ-ಅಂಶಗಳಾಗದೆ, ತಮ್ಮ ಬದುಕಿನ ಬವಣೆ ನೀಗಿಸುವ ಸಂಜೀವಿನಿಯಾಗಲಿ ಎಂದು ಇವರು ಕಾಯುತ್ತಿದ್ದಾರೆ.

]]>
Sat, 17 Jan 2026 16:52:08 +0530 shivuagrico
Drone pilot training&ಡ್ರೋನ್ ಖರೀದಿಸಲು 8 ಲಕ್ಷ ಸಬ್ಸಿಡಿ, ಉಚಿತ ಡ್ರೋನ್ ಪೈಲಟ್ ತರಬೇತಿ; 15 ದಿನಗಳಲ್ಲಿ ಡ್ರೋನ್‌ ಹಾರಿಸುವುದನ್ನು ಕಲಿಯಿರಿ https://krushirushi.in/Drone-pilot-training-2391 https://krushirushi.in/Drone-pilot-training-2391 Drone pilot training-ಡ್ರೋನ್ ಖರೀದಿಸಲು 8 ಲಕ್ಷ ಸಬ್ಸಿಡಿ, ಉಚಿತ ಡ್ರೋನ್ ಪೈಲಟ್ ತರಬೇತಿ; 15 ದಿನಗಳಲ್ಲಿ ಡ್ರೋನ್‌ ಹಾರಿಸುವುದನ್ನು ಕಲಿಯಿರಿ


ತಾಂತ್ರಿಕತೆಯು ಮುಗಿಲೆತ್ತರಕ್ಕೇರುತ್ತಿರುವ ಈ ಕಾಲದಲ್ಲಿ, ಡ್ರೋನ್ ಪೈಲಟ್‌ಗಳ ಅವಶ್ಯಕತೆ ಗಣನೀಯವಾಗಿ ಹೆಚ್ಚಿದೆ. ಈ ನಿಟ್ಟಿನಲ್ಲಿ, ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಯ ಕೃಷಿ ಪದವೀಧರರಿಗಾಗಿ ಉಚಿತ ಡ್ರೋನ್ ಪೈಲಟ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. 15 ದಿನಗಳ ವಸತಿಯುತ ಈ ತರಬೇತಿಯು ಡ್ರೋನ್ ಹಾರಾಟದ ಕೌಶಲ್ಯ, ಸಂಬಂಧಿತ ನಿಯಮಗಳು ಮತ್ತು ಕೃಷಿಯಲ್ಲಿ ಡ್ರೋನ್‌ಗಳ ನವೀನ ಉಪಯೋಗಗಳ ಬಗ್ಗೆ ಸಮಗ್ರ ಜ್ಞಾನವನ್ನು ನೀಡುತ್ತದೆ. ಆಸಕ್ತರು ಮಾರ್ಚ್ 31, 2026 ರೊಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಇದು ಕೃಷಿ ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶಗಳನ್ನು ವಿಸ್ತರಿಸುವ ಒಂದು ಮಹತ್ವದ ಹೆಜ್ಜೆಯಾಗಿದೆ.

ಇಂದಿನ ತಾಂತ್ರಿಕ ಯುಗದಲ್ಲಿ ಡ್ರೋನ್ ಬಳಕೆ ಕೇವಲ ಮನೋರಂಜನೆಗೆ ಸೀಮಿತವಾಗಿಲ್ಲ. ಕೃಷಿ, ಸರ್ವೇಕ್ಷಣೆ, ರಕ್ಷಣೆ ಮತ್ತು ವಿತರಣಾ ಕ್ಷೇತ್ರಗಳಲ್ಲಿ ಡ್ರೋನ್ ಪೈಲಟ್‌ಗಳಿಗೆ ಭಾರೀ ಬೇಡಿಕೆ ಸೃಷ್ಟಿಯಾಗಿದೆ. ಇದನ್ನು ಮನಗಂಡು ಕರ್ನಾಟಕ ಸರ್ಕಾರ ಡ್ರೋನ್‌ ತರಬೇತಿ ಯೋಜನೆಯನ್ನು ಆರಂಭಿಸಿದೆ. ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ವತಿಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗಾಗಿ ಉಚಿತ ಸುಧಾರಿತ ಡ್ರೋನ್ ಪೈಲಟ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡ್ರೋನ್‌ ತರಬೇತಿ ಪಡೆಯುವುದು ಹೇಗೆ? ಅರ್ಹತೆಗಳೇನು? ಅರ್ಜಿ ಸಲ್ಲಿಕೆ ಹೇಗೆ? ಇತ್ಯಾದಿ ಮಾಹಿತಿಗಳನ್ನು ತಿಳಿಯೋಣ.

ಏನಿದು ಡ್ರೋನ್‌ ತರಬೇತಿ ಯೋಜನೆ?

ಇದು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ಹಮ್ಮಿಕೊಂಡಿರುವ 'ಉಚಿತ ಸುಧಾರಿತ ಡ್ರೋನ್ ಪೈಲಟ್ ತರಬೇತಿ' ಕಾರ್ಯಕ್ರಮವಾಗಿದೆ. ಮುಖ್ಯವಾಗಿ ಪರಿಶಿಷ್ಟ ಜಾತಿಯ ಕೃಷಿ ಪದವೀಧರರು ಅಥವಾ ಕೃಷಿ ವಿಜ್ಞಾನ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿರುವ ಈ ಯೋಜನೆಯು, ಅಭ್ಯರ್ಥಿಗಳಿಗೆ 15 ದಿನಗಳ ಕಾಲ ಉಚಿತ ವಸತಿಯುತ ತರಬೇತಿಯನ್ನು ನೀಡುತ್ತದೆ. ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ನಡೆಯುವ ಈ ತರಬೇತಿಯಲ್ಲಿ ಡ್ರೋನ್ ಹಾರಾಟದ ಪ್ರಾಯೋಗಿಕ ಜ್ಞಾನ, ಡಿಜಿಸಿಎ ನಿಯಮಗಳು ಮತ್ತು ಕೃಷಿ ಕ್ಷೇತ್ರದಲ್ಲಿ ಡ್ರೋನ್ ಅನ್ವಯಿಕೆಗಳ ಬಗ್ಗೆ (ಕೀಟನಾಶಕ ಸಿಂಪಡಣೆ, ಸಮೀಕ್ಷೆ ಇತ್ಯಾದಿ) ಸಮಗ್ರ ಮಾಹಿತಿ ನೀಡಲಾಗುತ್ತದೆ. ಅರ್ಹ ಯುವಜನತೆಯನ್ನು ತಾಂತ್ರಿಕವಾಗಿ ಸಬಲಗೊಳಿಸಿ, ಬೆಳೆಯುತ್ತಿರುವ ಡ್ರೋನ್ ತಂತ್ರಜ್ಞಾನದ ಮಾರುಕಟ್ಟೆಯಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಯೋಜನೆಯ ಪ್ರಮುಖ ಅಂಶಗಳು

  • ತರಬೇತಿ ನೀಡುವ ಸಂಸ್ಥೆ: ಈ ವಿಶೇಷ ತರಬೇತಿಯನ್ನು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ವತಿಯಿಂದ ಆಯೋಜಿಸಲಾಗಿದೆ.
  • ತರಬೇತಿಯ ಕಾಲಾವಧಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಒಟ್ಟು 15 ದಿನಗಳ ಕಾಲ ಸುಧಾರಿತ ಡ್ರೋನ್ ತರಬೇತಿಯನ್ನು ನೀಡಲಾಗುತ್ತದೆ.
  • ತರಬೇತಿಯ ಸ್ವರೂಪ: ಇದು ವಸತಿಯುತ ತರಬೇತಿಯಾಗಿದ್ದು, ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಅಲ್ಲಿಯೇ ವಾಸ್ತವ್ಯ ಹೂಡುವುದು ಕಡ್ಡಾಯವಾಗಿರುತ್ತದೆ.
  • ತರಬೇತಿ ನಡೆಯುವ ಸ್ಥಳಗಳು: ಈ ಕಾರ್ಯಕ್ರಮವನ್ನು ಕರ್ನಾಟಕದಾದ್ಯಂತ ಇರುವ ನಾಲ್ಕು ಕಂದಾಯ ವಿಭಾಗಗಳಲ್ಲಿ (ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರಗಿ) ಪ್ರತ್ಯೇಕವಾಗಿ ನಡೆಸಲು ಉದ್ದೇಶಿಸಲಾಗಿದೆ.
  • ಉಚಿತ ಸೌಲಭ್ಯಗಳು: ಈ ಯೋಜನೆಯಡಿ ಅಭ್ಯರ್ಥಿಗಳಿಗೆ ತರಬೇತಿ ಶುಲ್ಕವಿಲ್ಲದೆ ಸಂಪೂರ್ಣವಾಗಿ ಉಚಿತ ತರಬೇತಿಯನ್ನು ನೀಡಲಾಗುತ್ತದೆ.
  • ವಸತಿ ಮತ್ತು ಊಟ: ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿ ಸೌಲಭ್ಯ ಹಾಗೂ ಆಹಾರದ ವ್ಯವಸ್ಥೆಯನ್ನು ಇಲಾಖೆಯೇ ಭರಿಸಲಿದೆ.

ಯಾರು ಅರ್ಜಿ ಸಲ್ಲಿಸಬಹುದು?

  • ಈ ತರಬೇತಿಯು ಕೇವಲ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಮಾತ್ರ ಸೀಮಿತವಾಗಿದೆ.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷದಿಂದ ಗರಿಷ್ಠ 45 ವರ್ಷದೊಳಗಿರಬೇಕು.
  • ಅಭ್ಯರ್ಥಿಗಳು ಯು.ಜಿ.ಸಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ಕೃಷಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು ಅಥವಾ ಕೃಷಿ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಪದವೀಧರರು ಅಥವಾ ಕೃಷಿ ವಿಜ್ಞಾನಿಗಳಾಗಿರಬೇಕು.
  • ಅರ್ಜಿದಾರರು ಕಡ್ಡಾಯವಾಗಿ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ. 5.00 ಲಕ್ಷ ಮೀರಿರಬಾರದು.

ತರಬೇತಿಯಲ್ಲಿ ನೀವು ಏನು ಕಲಿಯುವಿರಿ?

  • ಅಭ್ಯರ್ಥಿಗಳಿಗೆ ವಿವಿಧ ಮಾದರಿಯ ಡ್ರೋನ್‌ಗಳು, ಅವುಗಳ ವಿನ್ಯಾಸ ಮತ್ತು ಅವು ಕೆಲಸ ಮಾಡುವ ತಾಂತ್ರಿಕ ವಿಧಾನಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ.
  • ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ನಿಯಮಾವಳಿಗಳಿಗೆ ಅನುಗುಣವಾಗಿ ಡ್ರೋನ್‌ಗಳನ್ನು ಸುರಕ್ಷಿತವಾಗಿ ಹಾರಿಸುವ ಪ್ರಾಯೋಗಿಕ ಅನುಭವವನ್ನು ಅಭ್ಯರ್ಥಿಗಳಿಗೆ ಒದಗಿಸಲಾಗುತ್ತದೆ.
  • ಡ್ರೋನ್‌ನ ವಿವಿಧ ಬಿಡಿಭಾಗಗಳನ್ನು ಸರಿಯಾಗಿ ಜೋಡಿಸುವ ವಿಧಾನ, ಬ್ಯಾಟರಿ ನಿರ್ವಹಣೆ ಮತ್ತು ತಾಂತ್ರಿಕ ಸಮಸ್ಯೆಗಳು ಎದುರಾದಾಗ ಅವುಗಳನ್ನು ಸರಿಪಡಿಸುವ (ರಿಪೇರಿ) ಕೌಶಲ್ಯಗಳನ್ನು ಕಲಿಸಲಾಗುತ್ತದೆ.
  • ರೈತರಿಗೆ ಅನುಕೂಲವಾಗುವಂತೆ ಡ್ರೋನ್ ಮೂಲಕ ಕೀಟನಾಶಕಗಳನ್ನು ವೈಜ್ಞಾನಿಕವಾಗಿ ಸಿಂಪಡಿಸುವುದು ಮತ್ತು ಬೆಳೆಗಳ ಆರೋಗ್ಯವನ್ನು ಸಮೀಕ್ಷೆ ಮಾಡುವ ಸುಧಾರಿತ ವಿಧಾನಗಳ ಬಗ್ಗೆ ವಿಶೇಷ ತರಬೇತಿ ನೀಡಲಾಗುತ್ತದೆ.

ತರಬೇತಿಯ ಪ್ರಮುಖ ನಿಯಮಗಳು ಮತ್ತು ಷರತ್ತುಗಳು:

  • ಅರ್ಜಿ ಸಲ್ಲಿಸುವಾಗ ನೀವು ಆಯ್ಕೆ ಮಾಡಿದ ವಿಭಾಗದ ಆಧಾರದ ಮೇಲೆ ತರಬೇತಿ ಕೇಂದ್ರವನ್ನು ನೀಡಲಾಗುತ್ತದೆ. ಆದರೆ, ಅಗತ್ಯವಿದ್ದಲ್ಲಿ ನಿಮ್ಮ ತರಬೇತಿ ವಿಭಾಗವನ್ನು ಬದಲಾಯಿಸುವ ಸಂಪೂರ್ಣ ಹಕ್ಕನ್ನು ಇಲಾಖೆಯು ಕಾಯ್ದಿರಿಸಿದೆ.
  • ಅಭ್ಯರ್ಥಿಗಳು ತರಬೇತಿಯ ಎಲ್ಲಾ ನೀತಿ-ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ನಿಗದಿಪಡಿಸಿದ ವೇಳಾಪಟ್ಟಿಯಂತೆ ಹಾಜರಿರಬೇಕು. ನಿಯಮ ಉಲ್ಲಂಘಿಸಿದರೆ ತರಬೇತಿಯಿಂದ ಅನರ್ಹಗೊಳಿಸಲಾಗುವುದು.
  • ಬೋಧಕರು, ಅಧ್ಯಾಪಕರು ಅಥವಾ ತರಬೇತಿ ಸಂಸ್ಥೆಯ ಸಿಬ್ಬಂದಿಯೊಂದಿಗೆ ದುರ್ನಡತೆ ಅಥವಾ ಅವಿಧೇಯತೆಯಿಂದ ವರ್ತಿಸುವ ಅಭ್ಯರ್ಥಿಗಳನ್ನು ತಕ್ಷಣವೇ ತರಬೇತಿಯಿಂದ ಹೊರಹಾಕಲಾಗುತ್ತದೆ.
  • ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಯು 15 ದಿನಗಳ ಪೂರ್ಣಾವಧಿ ತರಬೇತಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು.
  • ತರಬೇತಿಯ ಅವಧಿಯಲ್ಲಿ ಯಾವುದಾದರೂ ತುರ್ತು ಸಂದರ್ಭ ಎದುರಾದರೆ ಮಾತ್ರ ಇಲಾಖೆ ಮತ್ತು ತರಬೇತಿ ಸಂಸ್ಥೆಯ ಅನುಮತಿ ಪಡೆದು ಆವರಣದಿಂದ ಹೊರಗೆ ಹೋಗಲು ಅವಕಾಶವಿರುತ್ತದೆ.
  • ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡುವುದರಿಂದ ಅಥವಾ ವೆಬ್‌ಸೈಟ್ ಗಮನಿಸದೆ ಇರುವುದರಿಂದ ಉಂಟಾಗುವ ಯಾವುದೇ ಲೋಪಗಳಿಗೆ ಅಭ್ಯರ್ಥಿಗಳೇ ನೇರ ಹೊಣೆಗಾರರಾಗಿರುತ್ತಾರೆ.
  • ಅಭ್ಯರ್ಥಿಗಳು ಪ್ರಸ್ತುತ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಹೊಂದಿರಬೇಕು.

ಡ್ರೋನ್‌ ತರಬೇತಿಗೆ ಅರ್ಜಿ ಸಲ್ಲಿಸುವುದು ಹೇಗೆ?

  • ಅಭ್ಯರ್ಥಿಗಳು ಮೊದಲಿಗೆ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಸೇವಾ ಪೋರ್ಟಲ್ ಗೆ ಭೇಟಿ ನೀಡಬೇಕು.
  • ವೆಬ್‌ಸೈಟ್‌ನ ಮುಖಪುಟದಲ್ಲಿ ಕಾಣಿಸುವ 'Apply' (ಅರ್ಜಿ ಸಲ್ಲಿಸಿ) ಎಂಬ ಬಟನ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಪ್ರಕ್ರಿಯೆಯನ್ನು ಆರಂಭಿಸಬೇಕು.
  • ನಂತರ ತೆರೆಯುವ ಪುಟದಲ್ಲಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಆಧಾರ್‌ನಲ್ಲಿರುವಂತೆ ನಿಮ್ಮ ಹೆಸರನ್ನು ನಿಖರವಾಗಿ ನಮೂದಿಸಿ, ಅಲ್ಲಿರುವ ಕ್ಯಾಪ್ಚಾ ಕೋಡ್ ಟೈಪ್ ಮಾಡಿ 'Proceed' ಬಟನ್ ಒತ್ತಬೇಕು.
  • ಮುಂದಿನ ಹಂತದಲ್ಲಿ ನಿಮ್ಮ ವೈಯಕ್ತಿಕ ವಿವರಗಳು, ಶೈಕ್ಷಣಿಕ ಮಾಹಿತಿಗಳನ್ನು ಭರ್ತಿ ಮಾಡಬೇಕು ಹಾಗೂ ಕೇಳಲಾದ ಅಗತ್ಯ ದಾಖಲೆಗಳನ್ನು (ಜಾತಿ ಪ್ರಮಾಣ ಪತ್ರ, ಫೋಟೋ ಇತ್ಯಾದಿ) ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು.
  • ನೀವು ನೀಡಿದ ಎಲ್ಲಾ ಮಾಹಿತಿಗಳು ಸರಿಯಾಗಿವೆಯೇ ಎಂದು ಮತ್ತೊಮ್ಮೆ ಪರಿಶೀಲಿಸಿ, ಅಂತಿಮವಾಗಿ 'Submit' ಬಟನ್ ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಯಶಸ್ವಿಯಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಂದು?

ಅಂತಿಮ ದಿನಾಂಕ: ಈ ಉಚಿತ ಸುಧಾರಿತ ಡ್ರೋನ್ ಪೈಲಟ್ ತರಬೇತಿಯನ್ನು ಪಡೆಯಲು ಆಸಕ್ತಿ ಹೊಂದಿರುವ ಮತ್ತು ಅರ್ಹತೆ ಇರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2026ರ ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ಅಭ್ಯರ್ಥಿಗಳು ಕೊನೆಯ ದಿನದವರೆಗೆ ಕಾಯದೆ ಮುಂಚಿತವಾಗಿಯೇ ಅರ್ಜಿಯನ್ನು ಸಲ್ಲಿಸುವುದು ಉತ್ತಮ.

ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು:

  • ಆಧಾರ್ ಕಾರ್ಡ್
  • ಪಾನ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಇತ್ತೀಚಿನ ಫೋಟೋ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಸಕ್ರಿಯ ಮೊಬೈಲ್ ಸಂಖ್ಯೆ



ಇತರೆ ಖಾಸಗಿ ಮತ್ತು ಕೇಂದ್ರ ಸರ್ಕಾರದ ಯೋಜನೆಗಳು:

  • ನಮೋ ಡ್ರೋನ್ ದೀದಿ ಯೋಜನೆ: ಕೇಂದ್ರ ಸರ್ಕಾರದ ಈ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರಿಗೆ ಆದ್ಯತೆ ನೀಡಲಾಗುತ್ತದೆ. ಇಲ್ಲಿ ಡ್ರೋನ್ ಖರೀದಿಸಲು ಮತ್ತು ತರಬೇತಿ ಪಡೆಯಲು ಶೇಕಡಾ 80 ರಷ್ಟು ರಿಯಾಯಿತಿ (ಗರಿಷ್ಠ 8 ಲಕ್ಷ ರೂಪಾಯಿಗಳವರೆಗೆ) ನೀಡಲಾಗುತ್ತದೆ.
  • ಖಾಸಗಿ ತರಬೇತಿ ಸಂಸ್ಥೆಗಳು: ಕರ್ನಾಟಕದಲ್ಲಿ ಗರುಡ ಏರೋಸ್ಪೇಸ್, ಜೇನ್ ಏರೋಸ್ಪೇಸ್ ಮತ್ತು ಏರೋಫೈಲ್ ಅಕಾಡೆಮಿಗಳಂತಹ ಡಿಜಿಸಿಎ ಮಾನ್ಯತೆ ಪಡೆದ ಸಂಸ್ಥೆಗಳು ವೃತ್ತಿಪರ ತರಬೇತಿಯನ್ನು ನೀಡುತ್ತವೆ. ಆದರೆ ಇಲ್ಲಿ ತರಬೇತಿ ಪಡೆಯಲು ನಿಗದಿತ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
  • ಏರ್‌ಬಸ್ ತರಬೇತಿ ಕೇಂದ್ರ: ಜಾಗತಿಕ ಸಂಸ್ಥೆಯಾದ ಏರ್‌ಬಸ್ ಬೆಂಗಳೂರಿನಲ್ಲಿ ತನ್ನ ತರಬೇತಿ ಕೇಂದ್ರವನ್ನು ಹೊಂದಿದ್ದು, ಇಲ್ಲಿ ಮೈಕ್ರೋ ಮತ್ತು ಸಣ್ಣ ಗಾತ್ರದ ಡ್ರೋನ್‌ಗಳನ್ನು ಹಾರಿಸುವ ಬಗ್ಗೆ ಡಿಜಿಸಿಎ ನಿಯಮದಂತೆ ಸುಧಾರಿತ ತರಬೇತಿಯನ್ನು ನೀಡಲಾಗುತ್ತದೆ.
  • ಕೃಷಿ ವಿವಿಗಳ ಸಹಯೋಗ: ರಾಜ್ಯದ ರಾಯಚೂರು ಕೃಷಿ ವಿಶ್ವವಿದ್ಯಾಲಯದಂತಹ ಸಂಸ್ಥೆಗಳು ಕೃಷಿ ಡ್ರೋನ್‌ಗಳ ಬಳಕೆ ಮತ್ತು ಅದರ ಅನ್ವಯಗಳ ಬಗ್ಗೆ ಕಾಲಕಾಲಕ್ಕೆ ಅಲ್ಪಾವಧಿ ಕೋರ್ಸ್‌ಗಳನ್ನು ಆಯೋಜಿಸುತ್ತವೆ.

]]>
Sat, 17 Jan 2026 09:00:32 +0530 shivuagrico
Bhoo odethana yojane&ಭೂ ಒಡೆತನ ಯೋಜನೆ ಪರಿಷ್ಕರಣೆ: ಸ್ವಂತ ಭೂಮಿ ಖರೀದಿಸಲು 12.50 ಲಕ್ಷ ರೂ. ವರೆಗೆ ಸಹಾಯಧನ https://krushirushi.in/Bhoo-odethana-yojane-2390 https://krushirushi.in/Bhoo-odethana-yojane-2390 Bhoo odethana yojane-ಭೂ ಒಡೆತನ ಯೋಜನೆ ಪರಿಷ್ಕರಣೆ: ಸ್ವಂತ ಭೂಮಿ ಖರೀದಿಸಲು 12.50 ಲಕ್ಷ ರೂ. ವರೆಗೆ ಸಹಾಯಧನ


ಕರ್ನಾಟಕ ಸರ್ಕಾರವು ಭೂ ಒಡೆತನ ಯೋಜನೆಯಲ್ಲಿ ಮಹತ್ವದ ಬದಲಾವಣೆ ತಂದಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭೂಹೀನ ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಭೂಮಿ ಒದಗಿಸಲು ಘಟಕ ವೆಚ್ಚವನ್ನು ಹೆಚ್ಚಿಸಲಾಗಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ 25 ಲಕ್ಷ ರೂ. ಹಾಗೂ ಇತರ ಜಿಲ್ಲೆಗಳಲ್ಲಿ 20 ಲಕ್ಷ ರೂ. ವೆಚ್ಚ ನಿಗದಿಪಡಿಸಲಾಗಿದೆ. ಶೇ.50 ಸಹಾಯಧನ ಹಾಗೂ ಶೇ.50 ಸಾಲ ನೀಡಲಾಗುತ್ತದೆ. ಇದರಿಂದ ಬಡವರು ಕೂಡ ಭೂಮಿ ಹೊಂದುವಂತಾಗುತ್ತದೆ.


ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭೂಹೀನ ಮಹಿಳಾ ಕೃಷಿ ಕಾರ್ಮಿಕರನ್ನು ಆರ್ಥಿಕವಾಗಿ ಸಬಲೀಕರಿಸಲು "ಭೂ ಒಡೆತನ ಯೋಜನೆ" ಅಡಿಯಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿದೆ. 2026ರ ಸಾಲಿನಲ್ಲಿ ಜಮೀನುಗಳ ಬೆಲೆ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು ಘಟಕ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಸರ್ಕಾರದ ಈ ಸೌಲಭ್ಯವನ್ನು ಬಳಸಿಕೊಂಡು ಬಡವರು ಕೂಡ ಸ್ವಂತ ಭೂಮಿಯನ್ನು ಹೊಂದಲು ಈ ಯೋಜನೆ ಅನುಕೂಲ ಮಾಡಿಕೊಡಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ದೊರೆಯುವ ಪರಿಷ್ಕೃತ ಸಹಾಯಧನದ ಮೊತ್ತ ಎಷ್ಟು? ಪ್ರಯೋಜನಗಳೇನು? ಅರ್ಜಿ ಸಲ್ಲಿಕೆ ಹೇಗೆ? ಇತ್ಯಾದಿ ಮಾಹಿತಿಗಳನ್ನು ತಿಳಿಯೋಣ.

 

ಏನಿದು ಭೂ ಒಡೆತನ ಯೋಜನೆ?

ಕರ್ನಾಟಕ ಸರ್ಕಾರದ ಭೂ ಒಡೆತನ ಯೋಜನೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭೂಹೀನ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಭೂಮಿಯನ್ನು ಒದಗಿಸುವ ಪ್ರಮುಖ ಯೋಜನೆಯಾಗಿದ್ದು, 2026ರ ಸಾಲಿನಲ್ಲಿ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಘಟಕ ವೆಚ್ಚವನ್ನು 25.00 ಲಕ್ಷ ರೂ.ಗೆ ಹಾಗೂ ರಾಜ್ಯದ ಇತರೆ ಜಿಲ್ಲೆಗಳಲ್ಲಿ 20.00 ಲಕ್ಷ ರೂ.ಗೆ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ ಒಟ್ಟು ವೆಚ್ಚದ 50% ಸಹಾಯಧನ ಹಾಗೂ ಉಳಿದ 50% ಅನ್ನು ವಾರ್ಷಿಕ 6% ಬಡ್ಡಿ ದರದಲ್ಲಿ ಸಾಲವಾಗಿ ನೀಡಲಾಗುತ್ತದೆ. ಇದರ ಮೂಲಕ ಫಲಾನುಭವಿಗಳು ಕನಿಷ್ಠ 2 ಎಕರೆ ಖುಷ್ಕಿ ಅಥವಾ 1 ಎಕರೆ ತರಿ ಭೂಮಿಯನ್ನು ಖರೀದಿಸಿ ತಮ್ಮ ಹೆಸರಿನಲ್ಲಿ ನೋಂದಾಯಿಸಿಕೊಳ್ಳಬಹುದು.

ಯೋಜನೆಯ ಪ್ರಮುಖ ಉದ್ದೇಶ

ಗ್ರಾಮೀಣ ಭಾಗದ ಭೂಹೀನ ದಲಿತ ಮತ್ತು ಆದಿವಾಸಿ ಮಹಿಳೆಯರಿಗೆ ಕೃಷಿ ಭೂಮಿಯನ್ನು ಕೊಡಿಸುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಜಮೀನನ್ನು ಕುಟುಂಬದ ಹಿರಿಯ ಮಹಿಳೆಯ ಹೆಸರಿನಲ್ಲಿಯೇ ನೇರವಾಗಿ ನೋಂದಣಿ ಮಾಡಲಾಗುತ್ತದೆ.

ಪರಿಷ್ಕೃತ ಘಟಕ ವೆಚ್ಚ ಮತ್ತು ಸಹಾಯಧನ ಎಷ್ಟು?

  • ಕರ್ನಾಟಕ ಸರ್ಕಾರವು ಭೂಮಿಯ ಮಾರುಕಟ್ಟೆ ಬೆಲೆಗೆ ಅನುಗುಣವಾಗಿ ಭೂ ಒಡೆತನ ಯೋಜನೆಯ ಹಣಕಾಸಿನ ನೆರವನ್ನು ಎರಡು ಹಂತಗಳಲ್ಲಿ ವಿಂಗಡಿಸಿದೆ.
  • ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಜಮೀನು ಖರೀದಿಸಲು ಒಟ್ಟು ಘಟಕ ವೆಚ್ಚವನ್ನು 25.00 ಲಕ್ಷ ರೂ.ಎಂದು ನಿಗದಿಪಡಿಸಲಾಗಿದೆ. ಈ ನಾಲ್ಕು ಜಿಲ್ಲೆಗಳ ಫಲಾನುಭವಿಗಳಿಗೆ ಸರ್ಕಾರದಿಂದ 12.50 ಲಕ್ಷ ರೂ. ಸಹಾಯಧನ ಸಿಗಲಿದ್ದು, ಉಳಿದ 12.50 ಲಕ್ಷ ರೂ. ಮೊತ್ತವನ್ನು ಸಾಲದ ರೂಪದಲ್ಲಿ ನೀಡಲಾಗುತ್ತದೆ.
  • ರಾಜ್ಯದ ಇನ್ನುಳಿದ 27 ಜಿಲ್ಲೆಗಳಲ್ಲಿ ಭೂಮಿ ಖರೀದಿಸಲು ಒಟ್ಟು ಘಟಕ ವೆಚ್ಚವನ್ನು 20.00 ಲಕ್ಷ ರೂ. ಎಂದು ನಿಗದಿಪಡಿಸಲಾಗಿದೆ. ಈ ಜಿಲ್ಲೆಗಳ ಫಲಾನುಭವಿಗಳಿಗೆ ಸರ್ಕಾರವು 10.00 ಲಕ್ಷ ರೂ.ಸಹಾಯಧನವನ್ನು ನೀಡುತ್ತದೆ ಮತ್ತು ಬಾಕಿ ಇರುವ 10.00 ಲಕ್ಷ ರೂ. ಮೊತ್ತವನ್ನು ಕಡಿಮೆ ಬಡ್ಡಿದರದ ಸಾಲವಾಗಿ ಒದಗಿಸುತ್ತದೆ.

    ಸಾಲ ಮರುಪಾವತಿ ಮತ್ತು ಬಡ್ಡಿ ದರ ಎಷ್ಟು?

    • ಭೂ ಒಡೆತನ ಯೋಜನೆಯಡಿ ಫಲಾನುಭವಿಗಳು ಪಡೆಯುವ ಸಾಲದ ಮೊತ್ತಕ್ಕೆ ಸರ್ಕಾರವು ವಾರ್ಷಿಕ ಶೇಕಡಾ 6% ರಷ್ಟು ಅತ್ಯಲ್ಪ ಬಡ್ಡಿಯನ್ನು ವಿಧಿಸುತ್ತದೆ.
    • ಈ ಸಾಲವನ್ನು ಫಲಾನುಭವಿಗಳು ತಕ್ಷಣವೇ ಪಾವತಿಸಬೇಕಿಲ್ಲ; ಬದಲಿಗೆ 10 ರಿಂದ 20 ಅರ್ಧವಾರ್ಷಿಕ ಕಂತುಗಳಲ್ಲಿ ಮರುಪಾವತಿ ಮಾಡಲು ಅವಕಾಶ ನೀಡಲಾಗಿದೆ.
    • ಅಂದರೆ, ಫಲಾನುಭವಿಗಳು ಪ್ರತಿ ಆರು ತಿಂಗಳಿಗೊಮ್ಮೆ ಸಾಲದ ಕಂತನ್ನು ಪಾವತಿಸುವ ಮೂಲಕ ಒಟ್ಟು 10 ವರ್ಷಗಳ ಸುದೀರ್ಘ ಅವಧಿಯಲ್ಲಿ ಸಾಲವನ್ನು ತೀರಿಸಬಹುದು.
    • ಈ ಹಂತ-ಹಂತದ ಮರುಪಾವತಿ ವ್ಯವಸ್ಥೆಯು ಭೂಹೀನ ಮಹಿಳಾ ಕೃಷಿ ಕಾರ್ಮಿಕರಿಗೆ ಆರ್ಥಿಕ ಹೊರೆಯಾಗದಂತೆ ಜಮೀನಿನ ಮಾಲೀಕತ್ವವನ್ನು ಪಡೆಯಲು ಸಹಾಯ ಮಾಡುತ್ತದೆ.

    ಖರೀದಿಸಬಹುದಾದ ಭೂಮಿಯ ಪ್ರಮಾಣ ಎಷ್ಟು?

    • ಭೂ ಒಡೆತನ ಯೋಜನೆಯ ಹಣಕಾಸಿನ ನೆರವನ್ನು ಬಳಸಿಕೊಂಡು ಫಲಾನುಭವಿಗಳು ಕನಿಷ್ಠ 2 ಎಕರೆ ಖುಷ್ಕಿ (ಒಣ) ಭೂಮಿಯನ್ನು ಖರೀದಿಸಲು ಅವಕಾಶವಿದೆ.
    • ಒಂದು ವೇಳೆ ನೀರಾವರಿ ಸೌಲಭ್ಯವಿರುವ ತರಿ (ನೀರಾವರಿ) ಭೂಮಿಯನ್ನು ಖರೀದಿಸುವುದಾದರೆ, ಫಲಾನುಭವಿಗಳು 1 ಎಕರೆ ವರೆಗೆ ಜಮೀನನ್ನು ಪಡೆಯಬಹುದು.
    • ಇನ್ನು ತೋಟಗಾರಿಕಾ ಬೆಳೆಗಳನ್ನು ಬೆಳೆಯಲು ಯೋಗ್ಯವಾದ ತೋಟಗಾರಿಕಾ ಭೂಮಿಯನ್ನು ಖರೀದಿಸಲು ಇಚ್ಛಿಸಿದರೆ, ಕನಿಷ್ಠ ಅರ್ಧ ಎಕರೆ ಜಮೀನನ್ನು ಈ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು.
    • ಒಟ್ಟಾರೆಯಾಗಿ, ಸರ್ಕಾರ ನಿಗದಿಪಡಿಸಿದ ಘಟಕ ವೆಚ್ಚಕ್ಕೆ ( 20 ಲಕ್ಷ ರೂ. ಅಥವಾ 25 ಲಕ್ಷ ರೂ.) ಮಾರುಕಟ್ಟೆಯಲ್ಲಿ ಲಭ್ಯವಿರುವ ಜಮೀನಿನ ಪ್ರಮಾಣ ಅಥವಾ ಮೇಲೆ ತಿಳಿಸಿದ ಕನಿಷ್ಠ ಪ್ರಮಾಣದಲ್ಲಿ ಭೂಮಿಯನ್ನು ಖರೀದಿಸಲು ಅವಕಾಶ ನೀಡಲಾಗುತ್ತದೆ.

    ಅರ್ಹತಾ ಮಾನದಂಡಗಳೇನು?

    • ಭೂ ಒಡೆತನ ಯೋಜನೆಯ ಹಣಕಾಸಿನ ನೆರವನ್ನು ಬಳಸಿಕೊಂಡು ಫಲಾನುಭವಿಗಳು ಕನಿಷ್ಠ 2 ಎಕರೆ ಖುಷ್ಕಿ (ಒಣ) ಭೂಮಿಯನ್ನು ಖರೀದಿಸಲು ಅವಕಾಶವಿದೆ.
    • ಒಂದು ವೇಳೆ ನೀರಾವರಿ ಸೌಲಭ್ಯವಿರುವ ತರಿ (ನೀರಾವರಿ) ಭೂಮಿಯನ್ನು ಖರೀದಿಸುವುದಾದರೆ, ಫಲಾನುಭವಿಗಳು 1 ಎಕರೆ ವರೆಗೆ ಜಮೀನನ್ನು ಪಡೆಯಬಹುದು.
    • ಇನ್ನು ತೋಟಗಾರಿಕಾ ಬೆಳೆಗಳನ್ನು ಬೆಳೆಯಲು ಯೋಗ್ಯವಾದ ತೋಟಗಾರಿಕಾ ಭೂಮಿಯನ್ನು ಖರೀದಿಸಲು ಇಚ್ಛಿಸಿದರೆ, ಕನಿಷ್ಠ ಅರ್ಧ ಎಕರೆ (ಅಂದರೆ 20 ಗುಂಟೆ) ಜಮೀನನ್ನು ಈ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು.
    • ಒಟ್ಟಾರೆಯಾಗಿ, ಸರ್ಕಾರ ನಿಗದಿಪಡಿಸಿದ ಘಟಕ ವೆಚ್ಚಕ್ಕೆ (₹20 ಲಕ್ಷ ಅಥವಾ ₹25 ಲಕ್ಷ) ಮಾರುಕಟ್ಟೆಯಲ್ಲಿ ಲಭ್ಯವಿರುವ ಜಮೀನಿನ ಪ್ರಮಾಣ ಅಥವಾ ಮೇಲೆ ತಿಳಿಸಿದ ಕನಿಷ್ಠ ಪ್ರಮಾಣದಲ್ಲಿ ಭೂಮಿಯನ್ನು ಖರೀದಿಸಲು ಅವಕಾಶ ನೀಡಲಾಗುತ್ತದೆ.


    ಭೂ ಒಡೆತನಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ?

    • ಮೊದಲು ಸೇವಾ ಸಿಂಧು ಅಧಿಕೃತ ವೆಬ್‌ಸೈಟ್‌ಗೆ (sevasindhu.karnataka.gov.in) ಭೇಟಿ ನೀಡಿ.
    • ನೀವು ಮೊದಲ ಬಾರಿಗೆ ಭೇಟಿ ನೀಡುತ್ತಿದ್ದರೆ, 'ಹೊಸ ಬಳಕೆದಾರ ನೋಂದಣಿ' ಮೂಲಕ ನಿಮ್ಮ ವಿವರ ದಾಖಲಿಸಿ.
    • ನಿಮ್ಮ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಪೋರ್ಟಲ್‌ಗೆ ಲಾಗಿನ್ ಆಗಿ.
    • ಲಾಗಿನ್ ಆದ ನಂತರ 'ಇಲಾಖೆಗಳು ಮತ್ತು ಸೇವೆಗಳು' ವಿಭಾಗಕ್ಕೆ ಹೋಗಿ.
    • ಅಲ್ಲಿ ಹುಡುಕಾಟ ಬಾಕ್ಸ್‌ನಲ್ಲಿ 'ಭೂ ಮಾಲೀಕತ್ವ ಯೋಜನೆ' ಎಂದು ಟೈಪ್ ಮಾಡಿ ಹುಡುಕಿ.
    • ಯೋಜನೆ ಕಾಣಿಸಿಕೊಂಡಾಗ 'ಆನ್‌ಲೈನ್‌ನಲ್ಲಿ ಅನ್ವಯಿಸು' ಬಟನ್ ಮೇಲೆ ಕ್ಲಿಕ್ ಮಾಡಿ.
    • ಅರ್ಜಿಯಲ್ಲಿ ಕೇಳಲಾದ ಹೆಸರು, ವಿಳಾಸ, ಆಧಾರ್ ಮತ್ತು ಆರ್‌.ಡಿ ಸಂಖ್ಯೆಗಳಂತಹ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
    • ಅಗತ್ಯವಿರುವ ಜಾತಿ, ಆದಾಯ ಮತ್ತು ಭೂಹೀನ ಕೃಷಿ ಕಾರ್ಮಿಕ ಪ್ರಮಾಣಪತ್ರಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
    • ಎಲ್ಲಾ ಮಾಹಿತಿ ಸರಿಯಾಗಿದೆಯೇ ಎಂದು ಪರಿಶೀಲಿಸಿ 'ಸಲ್ಲಿಸು' ಬಟನ್ ಒತ್ತಿ.
    • ಅರ್ಜಿ ಸಲ್ಲಿಕೆಯಾದ ನಂತರ ಸಿಗುವ 'ಸ್ವೀಕೃತಿ ಪತ್ರ' ಅಥವಾ ಟೋಕನ್ ಸಂಖ್ಯೆಯನ್ನು ಭವಿಷ್ಯದ ಉಲ್ಲೇಖಕ್ಕಾಗಿ ಉಳಿಸಿಕೊಳ್ಳಿ.


    ಸಹಾಯವಾಣಿ

    ಯೋಜನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ - 94823 00400 ಅನ್ನು ಸಂಪರ್ಕಿಸಬಹುದು.


    ಹೆಚ್ಚುವರಿ ಸೌಲಭ್ಯಗಳು

    ಈ ಯೋಜನೆಯಡಿ ಜಮೀನು ಪಡೆದ ಫಲಾನುಭವಿಗಳಿಗೆ ನೀರಾವರಿ ಸೌಲಭ್ಯವಿಲ್ಲದಿದ್ದರೆ, ಸರ್ಕಾರದ 'ಗಂಗಾ ಕಲ್ಯಾಣ ಯೋಜನೆ' ಅಡಿಯಲ್ಲಿ ಉಚಿತವಾಗಿ ಬೋರೆವೆಲ್ ಕೊರೆಸಿಕೊಡುವ ಸೌಲಭ್ಯವನ್ನೂ ಸಹ ಪಡೆಯಲು ಅವಕಾಶವಿದೆ.

    ಅಗತ್ಯವಿರುವ ದಾಖಲೆಗಳು

    • ಇತ್ತೀಚಿನ ಭಾವಚಿತ್ರ.
    • ಜಾತಿ ಮತ್ತು ಆದಾಯ ಪ್ರಮಾಣ ಪತ್ರ (RD ಸಂಖ್ಯೆಯೊಂದಿಗೆ).
    • ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ.
    • ಭೂಹೀನ ಕೃಷಿ ಕಾರ್ಮಿಕ ದೃಢೀಕರಣ ಪತ್ರ (ತಹಶೀಲ್ದಾರ್ ಅವರಿಂದ).
    • ಖರೀದಿಸಲಿರುವ ಜಮೀನಿನ ದಾಖಲೆಗಳು (ದರ ಪಟ್ಟಿ/ಯೋಜನಾ ವರದಿ).

]]>
Fri, 16 Jan 2026 18:00:40 +0530 shivuagrico
Kuri sakanike&ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ: ಕುರಿ ಸಾಕಾಣಿಕೆಗೆ 43,750 ರೂಪಾಯಿ ರೈತರ ಖಾತೆಗೆ ನೇರ ಜಮಾ https://krushirushi.in/Kuri-sakanike-2389 https://krushirushi.in/Kuri-sakanike-2389 Kuri sakanike-ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ: ಕುರಿ ಸಾಕಾಣಿಕೆಗೆ 43,750 ರೂಪಾಯಿ ರೈತರ ಖಾತೆಗೆ ನೇರ ಜಮಾ

ಕುರಿ ಸಾಕಾಣಿಕೆ ಈಗ ಲಾಭದಾಯಕ ಉದ್ಯಮವಾಗಿದೆ. ಕುರಿ ಸಾಕಣೆ ಮಾಡುವ ಯುವಕರನ್ನು ಪ್ರೋತ್ಸಾಹಿಸಲು ಕರ್ನಾಟಕ ಸರ್ಕಾರ 'ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ' ಜಾರಿಗೆ ತಂದಿದೆ. ಈ ಯೋಜನೆಯಡಿ 20 ಕುರಿ/ಮೇಕೆ ಮತ್ತು 1 ಟಗರು/ಹೋತದ ಘಟಕ ನೀಡಲಾಗುತ್ತದೆ. ಒಟ್ಟು 1,75,000 ರೂ. ವೆಚ್ಚದಲ್ಲಿ 50% ಸಾಲ, 25% ಸಹಾಯಧನ, 25% ಫಲಾನುಭವಿ ವಂತಿಕೆ ಇರುತ್ತದೆ. ಗ್ರಾಮೀಣ ಯುವಕರಿಗೆ ಉದ್ಯೋಗಾವಕಾಶ ನೀಡಲು ಇದು ಸಹಕಾರಿ. ಈ ಯೋಜನೆಯ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಿಂದೊಮ್ಮೆ ಒಂದು ಸಮುದಾಯಕ್ಕಷ್ಟೇ ಸೀಮಿತವಾಗಿದ್ದ ಕುರಿ ಸಾಕಾಣಿಕೆಯು ಇಂದು ಒಂದು ವೃತ್ತಿಪರ ಉದ್ಯೋಗವಾಗಿ ಮಾರ್ಪಾಟ್ಟಿದೆ. ಹೆಚ್ಚಿನ ಯುವಕರು ಕುರಿ ಸಾಕಾಣಿಕೆಯತ್ತ ಆಕರ್ಷಿತರಾಗುತ್ತಿದ್ದಾರೆ. ಕರ್ನಾಟಕ ಸರ್ಕಾರವು ರಾಜ್ಯದ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಜೀವನಮಟ್ಟವನ್ನು ಸುಧಾರಿಸಲು ಮತ್ತು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ' ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆರ್ಥಿಕವಾಗಿ ಹಿಂದುಳಿದ ಸದಸ್ಯರಿಗೆ ಸುಸ್ಥಿರ ಜೀವನೋಪಾಯವನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಏನಿದು ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ?

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯು ಕರ್ನಾಟಕ ಸರ್ಕಾರದ ಪಶುಸಂಗೋಪನಾ ಇಲಾಖೆಯ ಒಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ರಾಜ್ಯದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆರ್ಥಿಕವಾಗಿ ಹಿಂದುಳಿದ ಸದಸ್ಯರಿಗೆ ಸುಸ್ಥಿರ ಜೀವನೋಪಾಯವನ್ನು ಕಲ್ಪಿಸುವ ಉದ್ದೇಶ ಹೊಂದಿದೆ. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ಒಟ್ಟು 1,75,000 ರೂ.ವೆಚ್ಚದಲ್ಲಿ 20 ಕುರಿ/ಮೇಕೆ ಮತ್ತು 1 ಟಗರು/ಹೋತವನ್ನೊಳಗೊಂಡ (20+1) ಘಟಕವನ್ನು ನೀಡಲಾಗುತ್ತದೆ. ಈ ಮೊತ್ತದಲ್ಲಿ ಶೇ. 50 ರಷ್ಟು ಎನ್.ಸಿ.ಡಿ.ಸಿ ವತಿಯಿಂದ ಸಾಲ, ಶೇ. 25 ರಷ್ಟು ರಾಜ್ಯ ಸರ್ಕಾರದ ಸಹಾಯಧನ ಮತ್ತು ಉಳಿದ ಶೇ. 25 ರಷ್ಟು ಫಲಾನುಭವಿಯ ವಂತಿಕೆಯಾಗಿರುತ್ತದೆ.

 

ಯೋಜನೆಯ ಪ್ರಮುಖ ಅಂಶಗಳು

  • ಆರ್ಥಿಕ ನೆರವು ಮತ್ತು ಘಟಕಗಳ ಸ್ಥಾಪನೆ;ರಾಜ್ಯದ ಕುರಿಗಾಹಿಗಳ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರವು ಹೊಸ ಕುರಿ ಸಾಕಾಣಿಕೆ ಘಟಕಗಳನ್ನು ಸ್ಥಾಪಿಸಲು ಗಣನೀಯ ಪ್ರಮಾಣದ ಹಣಕಾಸಿನ ನೆರವು ನೀಡುತ್ತದೆ. ಈ ಯೋಜನೆಯಡಿ, ಕುರಿಗಾಹಿಗಳು ತಮ್ಮ ಅಸ್ತಿತ್ವದಲ್ಲಿರುವ ಸಾಕಾಣಿಕೆ ಕೇಂದ್ರಗಳನ್ನು ವಿಸ್ತರಿಸಲು ಅಥವಾ ಹೊಸದಾಗಿ 20 ಕುರಿ ಹಾಗೂ 1 ಟಗರು ಒಳಗೊಂಡ ಘಟಕಗಳನ್ನು ಪ್ರಾರಂಭಿಸಲು ಬ್ಯಾಂಕ್‌ಗಳ ಮೂಲಕ ಸಾಲ ಮತ್ತು ಸರ್ಕಾರದ ಮೂಲಕ ಸಬ್ಸಿಡಿ (ಸಹಾಯಧನ) ಪಡೆಯಬಹುದು.
  • ಗ್ರಾಮೀಣ ಸ್ವಯಂ ಉದ್ಯೋಗ ಮತ್ತು ಸ್ವಾವಲಂಬನೆ; ಗ್ರಾಮೀಣ ಭಾಗದ ಯುವಕರು ಮತ್ತು ಸಾಂಪ್ರದಾಯಿಕ ಕುರಿಗಾಹಿ ಕುಟುಂಬಗಳು ಉದ್ಯೋಗಕ್ಕಾಗಿ ನಗರಗಳಿಗೆ ವಲಸೆ ಹೋಗುವುದನ್ನು ತಡೆಯುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಕುರಿ ಸಾಕಾಣಿಕೆಯನ್ನು ಲಾಭದಾಯಕ ಉದ್ದಿಮೆಯನ್ನಾಗಿ ಪರಿವರ್ತಿಸುವ ಮೂಲಕ, ಗ್ರಾಮೀಣ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶಗಳನ್ನು ಒದಗಿಸಿ, ಅವರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಇದು ಉತ್ತೇಜನ ನೀಡುತ್ತದೆ.
  • ಮಾಂಸ ಮತ್ತು ಉಣ್ಣೆ ಉತ್ಪಾದನೆ ವೃದ್ಧಿ; ರಾಜ್ಯದ ಕೃಷಿ ಆಧಾರಿತ ಆರ್ಥಿಕತೆಯನ್ನು ಬಲಪಡಿಸಲು ಮಾಂಸ ಮತ್ತು ಉಣ್ಣೆಯ ಉತ್ಪಾದನೆಯನ್ನು ಹೆಚ್ಚಿಸುವುದು ಅತ್ಯಗತ್ಯವಾಗಿದೆ. ವೈಜ್ಞಾನಿಕ ಹೈನುಗಾರಿಕೆ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಗುಣಮಟ್ಟದ ಮಾಂಸವನ್ನು ಉತ್ಪಾದಿಸಿ ಮಾರುಕಟ್ಟೆಗೆ ಪೂರೈಸಲು ಈ ಯೋಜನೆ ಸಹಕಾರಿಯಾಗಿದೆ. ಇದು ಕೇವಲ ಕುರಿಗಾಹಿಗಳ ಆದಾಯವನ್ನು ಹೆಚ್ಚಿಸುವುದಲ್ಲದೆ, ರಾಜ್ಯದ ಒಟ್ಟು ಜಿಡಿಪಿಗೆ ಪಶುಸಂಗೋಪನಾ ವಲಯದಿಂದ ಹೆಚ್ಚಿನ ಕೊಡುಗೆ ನೀಡುವಂತೆ ಮಾಡುತ್ತದೆ.

ಯೋಜನೆಯಡಿ ದೊರೆಯುವ ಆರ್ಥಿಕ ನೆರವು ಎಷ್ಟು?

  • ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮದ ಸಾಲ: ಒಟ್ಟು ಘಟಕ ವೆಚ್ಚದ ಶೇಕಡಾ 50 ರಷ್ಟು ಭಾಗ ಅಂದರೆ 87,500 ರೂ. ಹಣವನ್ನು ಎನ್‌ಸಿಡಿಸಿ ಮೂಲಕ ಸಾಲದ ರೂಪದಲ್ಲಿ ನೀಡಲಾಗುತ್ತದೆ. ಈ ಮೊತ್ತವನ್ನು ಫಲಾನುಭವಿಯು ನಿಗದಿತ ಅವಧಿಯಲ್ಲಿ ಮರುಪಾವತಿ ಮಾಡಬೇಕಿರುತ್ತದೆ.
  • ಸರ್ಕಾರದ ಸಹಾಯಧನ : ಕುರಿಗಾಹಿಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಕರ್ನಾಟಕ ಸರ್ಕಾರವು ಒಟ್ಟು ವೆಚ್ಚದ ಶೇಕಡಾ 25 ರಷ್ಟು ಮೊತ್ತವನ್ನು ಸಹಾಯಧನದ ರೂಪದಲ್ಲಿ ನೀಡುತ್ತದೆ. ಅಂದರೆ 43,750 ರೂ. ಹಣವು ಉಚಿತ ಸಹಾಯಧನವಾಗಿದ್ದು, ಇದನ್ನು ಮರುಪಾವತಿ ಮಾಡುವ ಅಗತ್ಯವಿರುವುದಿಲ್ಲ.
  • ಫಲಾನುಭವಿಯ ವಂತಿಕೆ: ಯೋಜನೆಯಲ್ಲಿ ಫಲಾನುಭವಿಯ ಪಾಲುದಾರಿಕೆಯನ್ನು ಖಚಿತಪಡಿಸಿಕೊಳ್ಳಲು, ಒಟ್ಟು ವೆಚ್ಚದ ಶೇಕಡಾ 25 ರಷ್ಟು ಭಾಗ ಅಂದರೆ 43,750 ರೂ. ಹಣವನ್ನು ಸ್ವತಃ ಅರ್ಜಿದಾರರೇ ಭರಿಸಬೇಕಾಗುತ್ತದೆ.

ಘಟಕದ ರಚನೆ ಮತ್ತು ಸ್ವರೂಪ ಹೇಗಿರಬೇಕು?

ಈ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಒಂದು ಸಣ್ಣ ಪ್ರಮಾಣದ ಕುರಿ ಅಥವಾ ಮೇಕೆ ಸಾಕಾಣಿಕೆ ಘಟಕವನ್ನು ಮಂಜೂರು ಮಾಡಲಾಗುತ್ತದೆ. ಈ ಘಟಕವು ಒಟ್ಟು 21 ಪ್ರಾಣಿಗಳನ್ನು ಒಳಗೊಂಡಿರುತ್ತದೆ, ಅದರಲ್ಲಿ 20 ಹೆಣ್ಣು ಕುರಿ/ಮೇಕೆಗಳು ಮತ್ತು ಸಂತಾನೋತ್ಪತ್ತಿಗಾಗಿ 1 ಗಂಡು ಟಗರು ಅಥವಾ ಹೋತವನ್ನು ನೀಡಲಾಗುತ್ತದೆ. ಇದನ್ನು ವೈಜ್ಞಾನಿಕವಾಗಿ ಒಂದು ಲಾಭದಾಯಕ ಸಾಕಾಣಿಕಾ ಘಟಕವೆಂದು ಪರಿಗಣಿಸಲಾಗುತ್ತದೆ.

ಒಟ್ಟು ವೆಚ್ಚದ ವಿವರ

ಒಂದು ಪೂರ್ಣ ಪ್ರಮಾಣದ ಘಟಕವನ್ನು ಸ್ಥಾಪಿಸಲು ತಗಲುವ ಒಟ್ಟು ಮೊತ್ತವನ್ನು 1,75,000 ರೂ. (ಒಂದು ಲಕ್ಷದ ಎಪ್ಪತ್ತೈದು ಸಾವಿರ ರೂಪಾಯಿಗಳು) ಎಂದು ನಿಗದಿಪಡಿಸಲಾಗಿದೆ. ಈ ಮೊತ್ತವು ಪ್ರಾಣಿಗಳ ಖರೀದಿ ಮತ್ತು ಇತರ ಪ್ರಾರಂಭಿಕ ವೆಚ್ಚಗಳನ್ನು ಒಳಗೊಂಡಿರುತ್ತದೆ.

ಅರ್ಹತಾ ಮಾನದಂಡಗಳೇನು?

  • ಈ ಯೋಜನೆಯ ಲಾಭ ಪಡೆಯಲು ಅರ್ಜಿದಾರರು ಕಡ್ಡಾಯವಾಗಿ ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  • ಅರ್ಜಿದಾರರು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು, ಅಂದರೆ ವಯಸ್ಕರಾಗಿರಬೇಕು.
  • ಕುರಿಗಾಹಿ ವೃತ್ತಿಯಲ್ಲಿ ತೊಡಗಿಸಿಕೊಂಡಿರಬೇಕು. ಇದು ಕುರುಬ ಸಮುದಾಯದವರು ಅಥವಾ ಸಕ್ರಿಯವಾಗಿ ಕುರಿ ಸಾಕಾಣಿಕೆಯನ್ನು ವೃತ್ತಿಯನ್ನಾಗಿ ಮಾಡಿಕೊಂಡಿರುವವರಿಗೆ ಅನ್ವಯಿಸುತ್ತದೆ.

ಸಂಘಟನೆ ಮತ್ತು ತಾಂತ್ರಿಕ ನೋಂದಣಿ

  • ಫಲಾನುಭವಿಯು ಸ್ಥಳೀಯ ಅಥವಾ ಜಿಲ್ಲಾ ಮಟ್ಟದ 'ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘ'ದ ಕಡ್ಡಾಯ ಸದಸ್ಯರಾಗಿರಬೇಕು. ಸದಸ್ಯರಲ್ಲದವರಿಗೆ ಈ ಯೋಜನೆಯಡಿ ಸೌಲಭ್ಯ ಸಿಗುವುದಿಲ್ಲ.
  • ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅರ್ಜಿದಾರರು ಕೃಷಿ ಇಲಾಖೆಯ ಫ್ರೂಟ್ಸ್ (FRUITS) ಪೋರ್ಟಲ್‌ fruits.karnataka.gov.in/ ನಲ್ಲಿ ನೋಂದಾಯಿಸಿಕೊಂಡಿರಬೇಕು. ಇದರೊಂದಿಗೆ, ಮಾರಾಟ ಪ್ರಕ್ರಿಯೆಗಾಗಿ NeML (National E-Market Limited) ಆನ್‌ಲೈನ್ ಮಾರ್ಕೆಟಿಂಗ್ ಪ್ಲಾಟ್‌ಫಾರ್ಮ್‌ನಲ್ಲಿಯೂ ಹೆಸರು ನೋಂದಾಯಿಸಿರುವುದು ಅತ್ಯಗತ್ಯ.

ಪ್ರಮುಖ ಷರತ್ತುಗಳು ಏನೇನು?

  • ಕುರಿ ಅಥವಾ ಮೇಕೆಗಳನ್ನು ವೈಜ್ಞಾನಿಕವಾಗಿ ಸಾಕಲು ಅರ್ಜಿದಾರರ ಬಳಿ ಕನಿಷ್ಠ 1000 ಚದರ ಅಡಿಗಳಷ್ಟು ಸ್ವಂತ ಜಾಗ ಲಭ್ಯವಿರಬೇಕು. ಪ್ರಾಣಿಗಳ ವಾಸಸ್ಥಳ ಮತ್ತು ನಿರ್ವಹಣೆಗೆ ಇದು ಅವಶ್ಯಕ.
  • ಯೋಜನೆಯ ಲಾಭವು ಹೆಚ್ಚಿನ ಕುಟುಂಬಗಳಿಗೆ ತಲುಪಲಿ ಎಂಬ ಉದ್ದೇಶದಿಂದ, ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಅರ್ಜಿದಾರರು ಕಳೆದ 3 ವರ್ಷಗಳಲ್ಲಿ ಪಶುಸಂಗೋಪನಾ ಇಲಾಖೆಯ ಯಾವುದೇ ಯೋಜನೆಗಳ ಅಡಿಯಲ್ಲಿ ಯಾವುದೇ ರೀತಿಯ ಆರ್ಥಿಕ ನೆರವು ಅಥವಾ ಸಹಾಯಧನವನ್ನು ಪಡೆದಿರಬಾರದು. ಒಂದು ವೇಳೆ ಈ ಹಿಂದೆ ನೆರವು ಪಡೆದಿದ್ದಲ್ಲಿ, ಅವರು ಈ ಯೋಜನೆಗೆ ಅನರ್ಹರಾಗುತ್ತಾರೆ.

ಯೋಜನೆಯ ಪ್ರಸ್ತುತ ಸ್ಥಿತಿ ಏನು?

ಪ್ರಸ್ತುತ 2026ರ ಆರಂಭದ ಮಾಹಿತಿಯಂತೆ, ಈ ಯೋಜನೆಯು ರಾಜ್ಯಾದ್ಯಂತ ಜಾರಿಯಲ್ಲಿದ್ದರೂ ಕೆಲವು ಜಿಲ್ಲೆಗಳಲ್ಲಿ ಅನುದಾನದ ಬಿಡುಗಡೆ ವಿಳಂಬವಾಗಿರುವ ವರದಿಗಳಿವೆ. ಕಳೆದ ವರ್ಷಗಳಲ್ಲಿ ಸಾವಿರಾರು ರೈತರು ಇದರ ಲಾಭ ಪಡೆದಿದ್ದಾರೆ. ಪ್ರಸ್ತುತ ಸಾಲಿನ ಹೊಸ ಅರ್ಜಿ ಸಲ್ಲಿಕೆ ಮತ್ತು ಅನುದಾನದ ಲಭ್ಯತೆಯ ಬಗ್ಗೆ ಮಾಹಿತಿ ಪಡೆಯಲು ರೈತರು ತಕ್ಷಣವೇ ತಮ್ಮ ಜಿಲ್ಲಾ ಪಶುಸಂಗೋಪನಾ ಕಚೇರಿಯನ್ನು ಸಂಪರ್ಕಿಸುವುದು ಸೂಕ್ತ.

ಅರ್ಜಿ ಸಲ್ಲಿಸುವುದು ಹೇಗೆ?

  • ಯೋಜನೆಯ ಲಾಭ ಪಡೆಯಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯ ತಾಲ್ಲೂಕು ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಕಚೇರಿಗೆ ಅಥವಾ ಸಹಾಯಕ ನಿರ್ದೇಶಕರ ಕಚೇರಿಗೆ ಖುದ್ದಾಗಿ ಭೇಟಿ ನೀಡಬೇಕು. ಅಲ್ಲಿ ಇಲಾಖೆಯು ನಿಗದಿಪಡಿಸಿದ ಅಧಿಕೃತ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.
  • ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಸ್ಥಳೀಯ ಕಚೇರಿಗೆ ಸಲ್ಲಿಸಬೇಕು.



ಫಲಾನುಭವಿಗಳ ಆಯ್ಕೆ ಹೇಗೆ?

ಸಲ್ಲಿಸಲಾದ ಅರ್ಜಿಗಳನ್ನು ಪರಿಶೀಲಿಸಲು ಜಿಲ್ಲಾ ಮಟ್ಟದಲ್ಲಿ ಒಂದು ಅಧಿಕೃತ ಸಮಿತಿಯನ್ನು ರಚಿಸಲಾಗಿರುತ್ತದೆ. ಈ ಸಮಿತಿಯು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ ಪಶುಸಂಗೋಪನಾ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕರು ಮತ್ತು ಲೀಡ್ ಬ್ಯಾಂಕ್ ಮ್ಯಾನೇಜರ್‌ಗಳು ಸದಸ್ಯರಾಗಿರುತ್ತಾರೆ. ಈ ಸಮಿತಿಯು ಅರ್ಜಿದಾರರ ಅರ್ಹತೆ ಮತ್ತು ಲಭ್ಯವಿರುವ ಗುರಿಯ ಆಧಾರದ ಮೇಲೆ ಅಂತಿಮವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡುತ್ತದೆ.


ಅಗತ್ಯವಿರುವ ದಾಖಲೆಗಳು

  • ಆಧಾರ್ ಕಾರ್ಡ್/ಗುರುತಿನ ಚೀಟಿ
  • ಪಡಿತರ ಚೀಟಿ
  • ಬ್ಯಾಂಕ್ ಪಾಸ್‌ಬುಕ್ ಪ್ರತಿ
  • ಇತ್ತೀಚಿನ ಭಾವಚಿತ್ರ
  • ಜಾತಿ ಪ್ರಮಾಣಪತ್ರ (ಅಗತ್ಯವಿದ್ದಲ್ಲಿ)
  • ಸಹಕಾರಿ ಸಂಘದ ಸದಸ್ಯತ್ವದ ಪುರಾವೆ
]]>
Fri, 16 Jan 2026 08:37:56 +0530 shivuagrico
Koli Kuri shed&ಕುರಿ,ಕೋಳಿ,ದನದ ಶೆಡ್ ನಿರ್ಮಾಣಕ್ಕೆ ರೈತರ ಖಾತೆಗೆ ಜಮಾ ಆಗಲಿದೆ 57,000 ರೂಪಾಯಿ https://krushirushi.in/Koli-Kuri-shed-2388 https://krushirushi.in/Koli-Kuri-shed-2388 Koli shed-ಕುರಿ,ಕೋಳಿ,ದನದ ಶೆಡ್ ನಿರ್ಮಾಣಕ್ಕೆ ರೈತರ ಖಾತೆಗೆ ಜಮಾ ಆಗಲಿದೆ 57,000 ರೂಪಾಯಿ

ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿಯ ನಂತರ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಜಾನುವಾರು ಸಾಕಾಣಿಕೆ ಪ್ರಮುಖ ಜೀವನಾಧಾರವಾಗಿದೆ. ರೈತರ ಆದಾಯ ಹೆಚ್ಚಿಸಲು, ಸುರಕ್ಷಿತ ಹಾಗೂ ಸ್ವಚ್ಛ ಪರಿಸರದಲ್ಲಿ ಜಾನುವಾರುಗಳ ಆರೋಗ್ಯಕರ ಬೆಳವಣಿಗೆಗೆ ನೆರವಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಸಬ್ಸಿಡಿ ಮತ್ತು ಸಹಾಯಧನ ಯೋಜನೆಗಳನ್ನು ಜಾರಿಗೆ ತಂದಿವೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಾನುವಾರುಗಳ ಶೆಡ್‌ಗಳ ನಿರ್ಮಾಣಕ್ಕೆ 57 ಸಾವಿರ ರೂ.ಗಳ ಸಾಯಧನವನ್ನು ಪಡೆಯಬಹುದಾಗಿದೆ. ಜೊತೆಗೆ ವೈಯಕ್ತಿಕ ಕಾಮಗಾರಿಗೆ ಸರ್ಕಾರದಿಂದ ಸಹಾಯಧನ ಲಭ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಶೆಡ್‌ಗಳ ನಿರ್ಮಾಣಕ್ಕೆ ಸಹಾಯಧನ ಪಡೆಯುವುದು ಹೇಗೆ ಎಂಬುದನ್ನು ತಿಳಿಯೋಣ.

ಏನಿದು ಶೆಡ್‌ ನಿರ್ಮಾಣ ಸಹಾಯಧನ ಯೋಜನೆ?

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮುಖ್ಯ ಉದ್ದೇಶವು ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬದ ವಯಸ್ಕ ಸದಸ್ಯರಿಗೆ, ಅವರು ಕೌಶಲ್ಯರಹಿತ ದೈಹಿಕ ಕೆಲಸ ಮಾಡಲು ಸ್ವಯಂಸೇವಕರಾಗಿ ಮುಂದೆ ಬಂದಲ್ಲಿ, ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಖಾತರಿಯ ವೇತನದ ಉದ್ಯೋಗವನ್ನು ಒದಗಿಸುವುದಾಗಿದೆ. ಈ ಯೋಜನೆಯಡಿ ಒಟ್ಟು 266 ರೀತಿಯ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ಅವುಗಳಲ್ಲಿ ಶಾಲೆ ಕಾಂಪೌಂಡ್, ಆಟದ ಮೈದಾನ, ಶೌಚಾಲಯ, ಅಡುಗೆ ಕೋಣೆ, ಮಳೆ ನೀರು ಕೊಯ್ಲು, ಅರಣ್ಯೀಕರಣ, ಪೌಷ್ಟಿಕ ಕೈತೋಟ, ಕೆರೆ ಅಭಿವೃದ್ಧಿ, ರಾಜಕಾಲುವೆ, ಚರಂಡಿ, ಸಮುದಾಯ ಭವನ, ಗೋದಾಮು, ಸ್ವಚ್ಛ ಸಂಕೀರ್ಣ ಘಟಕ, ಬೂದು ನೀರು ನಿರ್ವಹಣೆ, ಸ್ಮಶಾನ ಅಭಿವೃದ್ಧಿ ಮುಂತಾದವುಗಳು ಸೇರಿವೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯು ಗ್ರಾಮೀಣ ಜನರ ಜೀವನ ಮಟ್ಟ ಸುಧಾರಿಸಲು ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳ ಮೂಲಕ ಆರ್ಥಿಕ ನೆರವು ನೀಡುತ್ತದೆ. ಇದರಲ್ಲಿ ದನ, ಕುರಿ, ಮೇಕೆ, ಮತ್ತು ಕೋಳಿ ಸಾಕಣೆಗಾಗಿ ವೈಯಕ್ತಿಕ ಶೆಡ್‌ ನಿರ್ಮಾಣಕ್ಕೆ ಸಹಾಯಧನವೂ ಲಭ್ಯವಿದೆ.

ಸಹಾಯಧನದ ಮೊತ್ತ ಎಷ್ಟು?

  • ಹಸು ಮತ್ತು ಎಮ್ಮೆ ಕೊಟ್ಟಿಗೆ ನಿರ್ಮಾಣಕ್ಕೆ ಎಲ್ಲಾ ವರ್ಗದ ರೈತರಿಗೂ 57,000 ರೂ. ಸಹಾಯಧನ ನೀಡಲಾಗುತ್ತದೆ.
  • ಈ ಮೊತ್ತದಲ್ಲಿ ಸುಮಾರು 10,556 ರೂ. ಕೂಲಿಯಾಗಿ ಮತ್ತು ಉಳಿದ 46,644 ರೂ. ಸಾಮಗ್ರಿ ಸಹಾಯಧನವಾಗಿ ಸಿಗುತ್ತದೆ. ಕುರಿ, ಕೋಳಿ, ಹಂದಿ ಶೆಡ್‌ ನಿರ್ಮಾಣಕ್ಕೂ ಸಹಾಯಧನ ಲಭ್ಯವಿದೆ.
  • ಒಂದು ಕುಟುಂಬವು ಜೀವಿತಾವಧಿಯಲ್ಲಿ ನರೇಗಾ ವೈಯಕ್ತಿಕ ಕಾಮಗಾರಿಗಳ ಅಡಿಯಲ್ಲಿ ಗರಿಷ್ಠ 5 ಲಕ್ಷ ರೂ.ವರೆಗೆ ಸಹಾಯಧನ ಪಡೆಯಬಹುದಾಗಿದೆ. ಕೃಷಿ ಹೊಂಡ, ತೋಟಗಾರಿಕೆ ಬೆಳೆ, ಕ್ಷೇತ್ರ ಬದು ಇತ್ಯಾದಿ ವೈಯಕ್ತಿಕ ಕಾಮಗಾರಿಗಳಿಗೂ ನೆರವು ಸಿಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ನರೇಗಾ ಯೋಜನೆಯ ಲಾಭ ಪಡೆಯಲು ಮೊದಲು ಜಾಬ್ ಕಾರ್ಡ್ ಹೊಂದಿರಬೇಕು. ಇಲ್ಲದಿದ್ದರೆ, ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ನೀವು ಜಾನುವಾರುಗಳನ್ನು ಸಾಕುತ್ತಿದ್ದೀರಿ ಮತ್ತು ಶೆಡ್ ಅಗತ್ಯವಿದೆ ಎಂಬುದನ್ನು ದೃಢೀಕರಿಸಲು ಸ್ಥಳೀಯ ಪಶು ಚಿಕಿತ್ಸಾಲಯಕ್ಕೆ ಭೇಟಿ ನೀಡಿ, ದೃಢೀಕರಣ ಪತ್ರ ಪಡೆಯಬೇಕು. ಎಲ್ಲಾ ದಾಖಲೆಗಳೊಂದಿಗೆ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಅರ್ಜಿ ಪರಿಶೀಲನೆ ನಂತರ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ಆರಂಭಕ್ಕೆ ಅನುಮತಿ ಸಿಗುತ್ತದೆ.

ದಾಖಲೆಗಳು

  • ಜಾಬ್ ಕಾರ್ಡ್ ಪ್ರತಿ
  • ಆಧಾರ್ ಕಾರ್ಡ್
  • ಭೂಮಿಯ ದಾಖಲಾತಿ (ಪಹಣಿ)
  • ಬ್ಯಾಂಕ್ ಖಾತೆಯ ವಿವರಗಳು
  • ಪಶು ವೈದ್ಯಾಧಿಕಾರಿಗಳ ದೃಢೀಕರಣ ಪತ್ರ

ಕುರಿ ಮತ್ತು ಮೇಕೆ ಸಾಕಾಣಿಕೆಗಾಗಿ ಇತರೆ ಯೋಜನೆಗಳು

ಹೈನುಗಾರಿಕೆಯ ಜೊತೆಗೆ ಕುರಿ ಮತ್ತು ಮೇಕೆ ಸಾಕಾಣಿಕೆಗೆ ಉತ್ತೇಜನ ನೀಡಲು ಕರ್ನಾಟಕ ಸರ್ಕಾರವು ಪ್ರಮುಖ ಯೋಜನೆಗಳನ್ನು ಜಾರಿಗೆ ತಂದಿದೆ.

  • ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ:

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿಯಲ್ಲಿ, ರಾಜ್ಯದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ 10 ಸಾವಿರ ಆರ್ಥಿಕವಾಗಿ ಹಿಂದುಳಿದ ಕುರಿಗಾಹಿ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು ಒದಗಿಸಲಾಗುತ್ತಿದೆ. ಯೋಜನೆಯಡಿ ಘಟಕದ ಒಟ್ಟು ವೆಚ್ಚ 1,75,000 ರೂ. ಆಗಿದೆ.
ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (NCDC) ಮತ್ತು ಭಾರತ ಸರ್ಕಾರದ ಸಹಕಾರ ಇಲಾಖೆಯಿಂದ ಶೇ. 50% ಸಾಲ ನೀಡಲಾಗುತ್ತದೆ. ರಾಜ್ಯ ಸರ್ಕಾರದಿಂದ ಶೇ. 25% ಸಹಾಯಧನ (ಸಬ್ಸಿಡಿ) ಲಭ್ಯವಾಗಲಿದ್ದು, ಫಲಾನುಭವಿ ಸದಸ್ಯರಿಂದ ಶೇ. 25% ವಂತಿಕೆ ಸಂಗ್ರಹಿಸಲಾಗುತ್ತದೆ.

  • ವಿಶೇಷ ಘಟಕ ಯೋಜನೆ / ಗಿರಿಜನ ಉಪಯೋಜನೆ

ಈ ಯೋಜನೆಯಡಿ ಕರ್ನಾಟಕ ಕುರಿ ಮತ್ತು ಕುರಿ ಉಣ್ಣೆ ಅಭಿವೃದ್ಧಿ ನಿಗಮದಿಂದ ಕುರಿ/ಮೇಕೆ ಘಟಕ ವಿತರಣೆ ಮಾಡಲಾಗುತ್ತದೆ. ಯೋಜನೆ ಪ್ರಯೋಜನ ಪಡೆಯಲು ಫಲಾನುಭವಿಗಳು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST)ದವರಾಗಿರಬೇಕು. 6+1 ಕುರಿ/ಮೇಕೆ ಘಟಕ ವಿತರಣೆ ಮಾಡಲಾಗುವುದು. ಘಟಕದ ಮೊತ್ತ 45,000 ರೂ.ಗಳಾಗಿವೆ. ಇದರಲ್ಲಿ 90% ಸಹಾಯಧನ ನೀಡಲಾಗುತ್ತದೆ. ಅಂದರೆ 40,500 ರೂ. ಘಟಕದ ವೆಚ್ಚದಲ್ಲಿ ಫಲಾನುಭವಿ ವಂತಿಕೆ / ಬ್ಯಾಂಕ್‌ ಸಾಲದ ಮತ್ತ ಕೇವಲ 4,500 ರೂ.ಗಳಾಗಿವೆ. ಉಳಿದ ಮೊತ್ತವನ್ನು ಸರ್ಕಾರವೇ ಪಾವತಿ ಮಾಡಲಿದೆ.

]]>
Thu, 15 Jan 2026 21:05:19 +0530 shivuagrico
Koli sakanike&ಉಚಿತ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ https://krushirushi.in/Koli-sakanike-2387 https://krushirushi.in/Koli-sakanike-2387 Koli sakanike-ಉಚಿತ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ


ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ.


ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕೋಳಿ ಮರಿಗಳನ್ನು ವಿತರಿಸಲಾಗುವುದು. ಜೇನು, ಕುರಿ, ಹಸು ಸಾಕಾಣಿಕೆಗೆ ಪ್ರೋತ್ಸಾಹ ನೀಡುತ್ತಿರುವ ಮಾದರಿಯಲ್ಲಿ ನಾಟಿ ಕೋಳಿ ಸಾಕಾಣಿಕೆ ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬಡ ಕುಟುಂಬಗಳ ಮಹಿಳೆಯರಿಗೆ ತಲಾ 20 ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುವುದು. ಪ್ರತಿ ತಾಲೂಕಿಗೆ 106 ಫಲಾನುಭವಿಗಳಂತೆ ಗುರಿ ನಿಗದಿಪಡಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿನ ರೈತ ಮಹಿಳೆಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘದ ಮಹಿಳಾ ಸದಸ್ಯರಿಗೆ, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಯೋಜನೆಯಡಿ ಆದ್ಯತೆ ನೀಡಲಾಗುವುದು.

ನಾಟಿ ಕೋಳಿಗಳಿಗೆ ಪ್ರಸ್ತುತ ಬೇಡಿಕೆ ಹೆಚ್ಚಾಗಿದೆ. ಇವುಗಳ ಸಾಕಾಣೆಗೆ ಹೆಚ್ಚು ಖರ್ಚಾಗುವುದಿಲ್ಲ. ಮನೆ ಮುಂದೆ ಹಿತ್ತಲುಗಳಲ್ಲಿ ಕೋಳಿ ಸಾಕಬಹುದು, ವೆಚ್ಚಕ್ಕಿಂತ ಅಧಿಕ ಲಾಭ ಸಿಗುತ್ತದೆ. ಇವುಗಳ ಸಾಕಾಣಿಕೆಗೆ ಹೆಚ್ಚಿನ ಶ್ರಮ ಅಗತ್ಯವಿರುವುದಿಲ್ಲ. ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಆರ್ಥಿಕ ಸಬಲತೆ ಸಾಧಿಸಲು ತಲಾ 20 ಕೋಳಿ ಮರಿ ವಿತರಿಸಲಾಗುವುದು ಎಂದು ಹೇಳಲಾಗಿದೆ.

1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming 

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ(Vetarnary department)ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.



ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್‌ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.

ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Vetarnary department schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?

ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ


ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.

ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy - https://krushirushi.in/Cattle-shed-subsidy-scheme-1630 

ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.


ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು

ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.


ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.


ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.

ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.


ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.

ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.


ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahvs.karnataka.gov.in/info-2/Schemes+&+Benefits/kn

]]>
Thu, 15 Jan 2026 16:42:28 +0530 shivuagrico
Baddi sahayadana&ಕೇವಲ 4% ಬಡ್ಡಿ ಸಹಾಯಧನದೊಂದಿಗೆ ಸಿಗಲಿದೆ 1ಕೋಟಿ ಸಾಲಸೌಲಭ್ಯ https://krushirushi.in/Baddi-sahayadana-2386 https://krushirushi.in/Baddi-sahayadana-2386 Baddi sahayadana-ಕೇವಲ 4% ಬಡ್ಡಿ ಸಹಾಯಧನದೊಂದಿಗೆ ಸಿಗಲಿದೆ 1ಕೋಟಿ ಸಾಲಸೌಲಭ್ಯ


ನಿಮ್ಮ ಕನಸಿನ ಸ್ವಂತ ಉದ್ಯಮಕ್ಕೆ ಕರ್ನಾಟಕ ಸರ್ಕಾರದ ಮಹತ್ವದ ಕೊಡುಗೆ. ₹1 ಕೋಟಿ ವರೆಗಿನ ಸಾಲಕ್ಕೆ ಕೇವಲ ಶೇ. 4ರಷ್ಟು ಬಡ್ಡಿ ಮಾತ್ರ ನೀವು ಕಟ್ಟಬೇಕು. ಉಳಿದ ಬಡ್ಡಿಯನ್ನು ಸರ್ಕಾರವೇ ಭರಿಸುತ್ತದೆ. ಕೈಗಾರಿಕೆ, ಐಟಿ, ಆರೋಗ್ಯ, ಪ್ರವಾಸೋದ್ಯಮ ಹೀಗೆ ಯಾವುದೇ ಕ್ಷೇತ್ರದಲ್ಲಿ ನಿಮ್ಮ ಉದ್ಯಮವನ್ನು ಐದು ವರ್ಷದೊಳಗೆ ಸ್ಥಾಪಿಸಿ, ಬೆಳೆಸಿ. ಇದು ನಿಮ್ಮ ಆರ್ಥಿಕ ಸ್ವಾವಲಂಬನೆಗೆ ಸುವರ್ಣಾವಕಾಶ!

ಸ್ವಂತ ಉದ್ಯಮ ಆರಂಭಿಸಿ ಆರ್ಥಿಕವಾಗಿ ಸಬಲರಾಗಲು ನಿಮಗೊಂದು ಸುವರ್ಣಾವಕಾಶ. ಕರ್ನಾಟಕ ಸರ್ಕಾರವು ಪರಿಶಿಷ್ಟ ಪಂಗಡದ ಸಮುದಾಯದ ಅಭ್ಯರ್ಥಿಗಳನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಮತ್ತು ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಲು ವಿಶೇಷ ಬಡ್ಡಿ ಸಹಾಯಧನ ಯೋಜನೆಯನ್ನು ಜಾರಿಗೆ ತಂದಿದೆ. ನೀವು ಹೊಸ ಉದ್ಯಮವನ್ನು ಪ್ರಾರಂಭಿಸಲು ಬಯಸಿದ್ದರೆ ಅಥವಾ ಅಸ್ತಿತ್ವದಲ್ಲಿರುವ ಘಟಕವನ್ನು ವಿಸ್ತರಿಸಲು ಆಲೋಚಿಸುತ್ತಿದ್ದರೆ, ಈ ಯೋಜನೆಯು ನಿಮಗೆ ಭದ್ರ ಬುನಾದಿ ಒದಗಿಸಲಿದೆ. ಈ ಹಿನ್ನೆಲೆಯಲ್ಲಿ ಏನಿದು ಬಡ್ಡಿ ಸಹಾಯಧನ ಯೋಜನೆ? ಈ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ? ಪ್ರಯೋಜನಗಳು ಏನು ಎಂಬುದನ್ನು ತಿಳಿಯೋಣ.

ಕರ್ನಾಟಕ ಸರ್ಕಾರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ಪಂಗಡದ ಉದ್ಯಮಿಗಳ ಆರ್ಥಿಕ ಸಬಲೀಕರಣಕ್ಕಾಗಿ ಈ ವಿಶೇಷ ಬಡ್ಡಿ ಸಹಾಯಧನ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಎಂ.ಎಸ್.ಎಂ.ಇ ಘಟಕಗಳು, ಹೋಟೆಲ್, ಫ್ರಾಂಚೈಸಿ ಅಥವಾ ಡೀಲರ್‌ಶಿಪ್‌ಗಳಂತಹ ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಅಥವಾ ಅಸ್ತಿತ್ವದಲ್ಲಿರುವ ಘಟಕಗಳನ್ನು ಆಧುನೀಕರಿಸಲು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಥವಾ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್‌ಗಳಿಂದ ಪಡೆಯುವ ಗರಿಷ್ಠ ರೂ. 1.00 ಕೋಟಿ ವರೆಗಿನ ಸಾಲಕ್ಕೆ ಕೇವಲ 4% ರಿಯಾಯಿತಿ ಬಡ್ಡಿ ದರವನ್ನು ನಿಗದಿಪಡಿಸಲಾಗಿದೆ (ಉಳಿದ ಬಡ್ಡಿಯನ್ನು ಸರ್ಕಾರವೇ ಭರಿಸುತ್ತದೆ). ಉದ್ಯಮದ ಸಂಪೂರ್ಣ ಮಾಲೀಕತ್ವವು ಎಸ್‌ಟಿ ಸಮುದಾಯದವರದ್ದೇ ಆಗಿರಬೇಕು ಎಂಬ ಷರತ್ತಿನೊಂದಿಗೆ, ಪಡೆದ ಸಾಲವನ್ನು 5 ವರ್ಷಗಳ ಅವಧಿಯಲ್ಲಿ ಮರುಪಾವತಿಸಲು ಅವಕಾಶವಿದ್ದು, ಇದು ಸಮುದಾಯದ ಯುವ ಉದ್ಯಮಿಗಳು ಕಡಿಮೆ ಬಂಡವಾಳ ವೆಚ್ಚದಲ್ಲಿ ಸ್ವಾವಲಂಬಿಗಳಾಗಲು ಅತ್ಯುತ್ತಮ ವೇದಿಕೆಯಾಗಿದೆ

ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಕೈಗೆಟುಕುವ ದರದಲ್ಲಿ ಬಂಡವಾಳ ಒದಗಿಸುವುದು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಉತ್ತೇಜಿಸುವುದು ಮತ್ತು ಸೇವಾ ವಲಯಗಳಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ

ಬಡ್ಡಿ ದರದ ರಿಯಾಯಿತಿ: ಈ ಯೋಜನೆಯಡಿ ಆಯ್ಕೆಯಾದ ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಕೇವಲ 4% ರಷ್ಟು ರಿಯಾಯಿತಿ ಬಡ್ಡಿ ದರದಲ್ಲಿ ಸಾಲದ ಸೌಲಭ್ಯ ದೊರೆಯುತ್ತದೆ. ಬ್ಯಾಂಕಿನ ಅಸಲಿ ಬಡ್ಡಿ ದರ ಮತ್ತು ಈ 4% ನಡುವಿನ ವ್ಯತ್ಯಾಸದ ಮೊತ್ತವನ್ನು ಸರ್ಕಾರವೇ ಬಡ್ಡಿ ಸಹಾಯಧನದ ರೂಪದಲ್ಲಿ ಭರಿಸುತ್ತದೆ.

ಗರಿಷ್ಠ ಸಾಲದ ಮಿತಿ: ಉದ್ಯಮಿಗಳು ತಮ್ಮ ಘಟಕಗಳ ಸ್ಥಾಪನೆ ಅಥವಾ ವಿಸ್ತರಣೆಗಾಗಿ ಈ ಯೋಜನೆಯ ಅಡಿಯಲ್ಲಿ ಗರಿಷ್ಠ 1.00 ಕೋಟಿ ರೂಪಾಯಿಗಳವರೆಗೆ ಸಾಲವನ್ನು ಪಡೆಯಲು ಅವಕಾಶವಿದೆ.


ಸಾಲ ಮರುಪಾವತಿಯ ಕಾಲಾವಕಾಶ: ಪಡೆದ ಸಾಲವನ್ನು ಮರುಪಾವತಿ ಮಾಡಲು ಉದ್ಯಮಿಗಳಿಗೆ 5 ವರ್ಷಗಳ ಕಾಲಾವಧಿಯನ್ನು ನಿಗದಿಪಡಿಸಲಾಗಿದೆ. ಈ ಅವಧಿಯಲ್ಲಿ ನಿಗದಿತ ಕಂತುಗಳ ಮೂಲಕ ಸಾಲ ತೀರಿಸಬಹುದಾಗಿದೆ.

ಸಾಲ ಒದಗಿಸುವ ಹಣಕಾಸು ಸಂಸ್ಥೆಗಳು: ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಉದ್ಯಮಿಗಳು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ , ಯಾವುದಾದರು ರಾಷ್ಟ್ರೀಕೃತ ಬ್ಯಾಂಕ್‌ಗಳು, ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್‌ಗಳು ಅಥವಾ ಅಪೆಕ್ಸ್ ಸಹಕಾರಿ ಬ್ಯಾಂಕ್‌ಗಳಿಂದ ಸಾಲವನ್ನು ಪಡೆಯಬಹುದಾಗಿದೆ.

ಕೈಗಾರಿಕಾ ವಲಯ: ಆಹಾರ ಸಂಸ್ಕರಣಾ ಘಟಕಗಳು, ಜವಳಿ ಉದ್ಯಮ, ಸಿದ್ಧ ಉಡುಪುಗಳ ತಯಾರಿಕೆ, ಎಂಜಿನಿಯರಿಂಗ್ ವರ್ಕ್‌ಶಾಪ್‌ಗಳು ಮತ್ತು ಆಟೋಮೊಬೈಲ್ ಬಿಡಿಭಾಗಗಳ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಈ ಯೋಜನೆಯಡಿ ಸಾಲ ಪಡೆಯಬಹುದು.

ಮಾಹಿತಿ ತಂತ್ರಜ್ಞಾನ ಮತ್ತು ಸೇವಾ ವಲಯ: ಸಾಫ್ಟ್‌ವೇರ್ ಅಭಿವೃದ್ಧಿ ಕೇಂದ್ರಗಳು, ಐಟಿ ಆಧಾರಿತ ಸೇವೆಗಳು ಹಾಗೂ ಈವೆಂಟ್ ಮ್ಯಾನೇಜ್‌ಮೆಂಟ್‌ನಂತಹ ಸೇವಾ ಆಧಾರಿತ ಉದ್ಯಮಗಳಿಗೆ ಸರ್ಕಾರವು ಪ್ರೋತ್ಸಾಹ ನೀಡುತ್ತದೆ.

ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳು: 2021-22ನೇ ಸಾಲಿನಿಂದ ಈ ಯೋಜನೆಯನ್ನು ವಿಸ್ತರಿಸಲಾಗಿದ್ದು, ಇದರ ಅಡಿಯಲ್ಲಿ ಸ್ವಂತ ಮಳಿಗೆ, ಪ್ರಮುಖ ಕಂಪನಿಗಳ ಡೀಲರ್‌ಶಿಪ್, ಫ್ರಾಂಚೈಸಿಗಳು ಮತ್ತು ಹೋಟೆಲ್ ಉದ್ಯಮಗಳನ್ನು ಆರಂಭಿಸಲು ಅವಕಾಶ ಕಲ್ಪಿಸಲಾಗಿದೆ.

ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರ: ಸುಸಜ್ಜಿತ ಆಸ್ಪತ್ರೆಗಳು, ನರ್ಸಿಂಗ್ ಹೋಮ್‌ಗಳು, ಸ್ಕ್ಯಾನಿಂಗ್ ಅಥವಾ ಡಯಾಗ್ನೋಸ್ಟಿಕ್ ಸೆಂಟರ್‌ಗಳು, ದಂತ ಚಿಕಿತ್ಸಾಲಯ ಮತ್ತು ಕಣ್ಣಿನ ಆಸ್ಪತ್ರೆಗಳನ್ನು ತೆರೆಯಲು ಹಾಗೂ ಆಧುನಿಕ ವೈದ್ಯಕೀಯ ಉಪಕರಣಗಳ ಖರೀದಿಗೆ ಸಹಾಯಧನ ಲಭ್ಯವಿದೆ.

ಪ್ರವಾಸೋದ್ಯಮ ಮತ್ತು ಆತಿಥ್ಯ ವಲಯ: ಪ್ರವಾಸಿಗರನ್ನು ಸೆಳೆಯಲು ಹೋಟೆಲ್, ರೆಸಾರ್ಟ್, ಕ್ಯಾಟರಿಂಗ್ ಸೇವೆಗಳು, ಅಮ್ಯೂಸ್‌ಮೆಂಟ್ ಪಾರ್ಕ್‌ಗಳು ಮತ್ತು ಪ್ರವಾಸಿ ಏಜೆನ್ಸಿಗಳನ್ನು ನಡೆಸಲು ಆಸಕ್ತಿಯಿರುವ ಉದ್ಯಮಿಗಳು ಈ ಯೋಜನೆಯ ಲಾಭ ಪಡೆಯಬಹುದು.

ಉದ್ಯಮವು ಸಂಪೂರ್ಣವಾಗಿ ಪರಿಶಿಷ್ಟ ಪಂಗಡದ ವ್ಯಕ್ತಿಗಳ ಮಾಲೀಕತ್ವದಲ್ಲಿರಬೇಕು. ಪಾಲುದಾರಿಕೆ ಸಂಸ್ಥೆಯಾಗಿದ್ದರೆ, ಎಲ್ಲಾ ಪಾಲುದಾರರು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದವರಾಗಿರಬೇಕು.

ಅರ್ಜಿದಾರರು ಈ ಹಿಂದೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಥವಾ ಯಾವುದೇ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಮರುಪಾವತಿ ಮಾಡದೆ ಸುಸ್ತಿದಾರರಾಗಿರಬಾರದು.

ಈ ಹಿಂದೆ ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಬಡ್ಡಿ ಸಹಾಯಧನ ಯೋಜನೆಯಡಿ ಪ್ರಯೋಜನ ಪಡೆದಿದ್ದರೆ ಈ ಯೋಜನೆಗೆ ಅರ್ಹರಲ್ಲ.

ಹಂತ 1: ನಿಮ್ಮ ಜಿಲ್ಲೆಯ ಹತ್ತಿರದ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಶಾಖಾ ಕಚೇರಿ ಅಥವಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡಿ.

ಹಂತ 2: ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಎಲ್ಲಾ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ.

ಹಂತ 3: ಅಗತ್ಯವಿರುವ ದಾಖಲೆಗಳ ಸ್ವಯಂ ದೃಢೀಕರಿಸಿದ ಪ್ರತಿಗಳನ್ನು ಲಗತ್ತಿಸಿ.

ಹಂತ 4: ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ಕಚೇರಿಯಲ್ಲಿ ಸಲ್ಲಿಸಿ ಮತ್ತು ಸ್ವೀಕೃತಿ ಪತ್ರ ಪಡೆಯಿರಿ.

ದಾಖಲೆಗಳು

ಅರ್ಜಿದಾರರ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಫೋಟೋ.

ಜಾತಿ ಪ್ರಮಾಣಪತ್ರ (SC/ST ಧೃಢೀಕರಣ).

ಬಯೋ-ಡೇಟಾ ಮತ್ತು ನಿವ್ವಳ ಮೌಲ್ಯದ ಹೇಳಿಕೆ.

ನಿಗದಿತ ನಮೂನೆಯಲ್ಲಿ ಪ್ರಮಾಣಪತ್ರ.

ಬ್ಯಾಂಕ್ ಖಾತೆಯ ವಿವರಗಳು.

ಹೆಚ್ಚಿನ ಮಾಹಿತಿಗಾಗಿ ಅಥವಾ ಯಾವುದೇ ಸಂದೇಹಗಳಿದ್ದಲ್ಲಿ ನಿಮ್ಮ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಸಹಾಯವಾಣಿ ಸಂಖ್ಯೆ: 080-22261703 ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದು.

Bele sala baddi manna-ಈ ಯೋಜನೆಯಡಿ ಸಿಗಲಿದೆ ನಿಮ್ಮ ಸಾಲದ ಮೇಲೆ 3% ಬಡ್ಡಿ ಮನ್ನಾ,ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

https://krushirushi.in/Bele-sala-baddi-manna-1905

]]>
Wed, 14 Jan 2026 07:56:11 +0530 shivuagrico
Mobile canteen subsidy&ಉದ್ಯಮ ಶೀಲತಾ ಅಭಿವೃದ್ದಿ ಯೋಜನೆಯಡಿ ಮೊಬೈಲ್‌ ಕ್ಯಾಂಟೀನ್‌ ತೆರೆಯಲು ಸಿಗಲಿದೆ 4 ಲಕ್ಷ ರೂ. ಸಹಾಯಧನ https://krushirushi.in/Mobile-canteen-subsidy-2385 https://krushirushi.in/Mobile-canteen-subsidy-2385 Mobile canteen subsidy-ಉದ್ಯಮ ಶೀಲತಾ ಅಭಿವೃದ್ದಿ ಯೋಜನೆಯಡಿ ಮೊಬೈಲ್‌ ಕ್ಯಾಂಟೀನ್‌ ತೆರೆಯಲು ಸಿಗಲಿದೆ 4 ಲಕ್ಷ ರೂ. ಸಹಾಯಧನ

ರಾಜ್ಯ ಸರಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆಯಡಿ ಸಣ್ಣ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಉದ್ದಿಮೆಯನ್ನು ಆರಂಭಿಸಲು ನೆರವು ನೀಡಲಾಗುತ್ತಿದೆ. ಈ ಯೋಜನೆಯಡಿ ಮೊಬೈಲ್‌ ಕ್ಯಾಂಟೀನ್‌ ಆರಂಭಿಸಲು ಆಹಾರ ಟ್ರಕ್‌ಗಳ ಖರೀದಿಗೆ ಸಹಾಯಧನಕ್ಕಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ಮೊಬೈಲ್‌ ಕ್ಯಾಂಟೀನ್‌ ಸಹಾಯಧನ ಯೋಜನೆ? ಯಾರಿಗೆ ಈ ಯೋಜನೆ ಅನ್ವಯಿಸಲಿದೆ? ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ತಿಳಿಯೋಣ.

ಏನಿದು ಉದ್ಯಮಶೀಲತೆ ಅಭಿವೃದ್ಧಿ ಯೋಜನೆ?

ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಅಂದರೆ ಉದ್ಯಮಗಳನ್ನು ಪ್ರಾರಂಭಿಸಲು ಮತ್ತು ಅಭಿವೃದ್ಧಿಪಡಿಸಲು ಸಹಾಯ ಮಾಡುವ ಒಂದು ಯೋಜನೆಯಾಗಿದೆ. ಈ ಯೋಜನೆಯು ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ವ್ಯಕ್ತಿಗಳಿಗೆ ಆರ್ಥಿಕ ನೆರವು, ತರಬೇತಿ ಮತ್ತು ಮಾರ್ಗದರ್ಶನ ನೀಡುತ್ತದೆ. ಈ ಯೋಜನೆಯಡಿ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳು ಮತ್ತು ಸ್ವಯಂ ಉದ್ಯೋಗ ಘಟಕಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸಲಾಗುತ್ತದೆ.

ಯೋಜನೆಯ ಪ್ರಮುಖ ಅಂಶಗಳು

  • ಆರ್ಥಿಕ ನೆರವು: ಉದ್ಯಮವನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನ ಸೌಲಭ್ಯಗಳನ್ನು ಒದಗಿಸುವುದು.
  • ತರಬೇತಿ ಮತ್ತು ಮಾರ್ಗದರ್ಶನ: ಉದ್ಯಮಶೀಲತಾ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವುದು.
  • ಮಾರುಕಟ್ಟೆ ನೆರವು: ಉದ್ಯಮಗಳು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಸಹಾಯ ಮಾಡುವುದು.

 

ಮೊಬೈಲ್‌ ಕ್ಯಾಂಟೀನ್‌ ತೆರೆಯಲು ಸಹಾಯಧನ

ರಾಜ್ಯ ಸರಕಾರದಿಂದ ಸಮಾಜ ಕಲ್ಯಾಣ ಇಲಾಖೆಯು ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ ಯೋಜನೆಯ ಅಡಿಯಲ್ಲಿ ಮೊಬೈಲ್‌ ಕ್ಯಂಟೀನ್‌ ವ್ಯವಹಾರಗಳನ್ನು ಆರಂಭಿಸಲು ಧನ ಸಹಾಯ ನೀಡುತ್ತಿದೆ. ಈ ಯೋಜನೆಯಡಿ ನೀವು ಮೊಬೈಲ್‌ ಕ್ಯಾಂಟೀನ್‌ಗಳನ್ನು ಆರಂಭಿಸಲು ಸರ್ಕಾರದಿಂದ 4 ಲಕ್ಷ ರೂ.ವರೆಗಿನ ಸಹಾಯಧನ ಪಡೆಯಬಹುದಾಗಿದೆ.

ಅರ್ಹತಾ ಮಾನದಂಡಗಳು

  • ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ ಯೋಜನೆಯ ಅಡಿಯಲ್ಲಿ ಸಂಪೂರ್ಣ ಸಹಾಯಧನದೊಂದಿಗೆ 4.00 ಲಕ್ಷ ರೂ. ಮೌಲ್ಯದ ಫಾಸ್ಟ್ ಫುಡ್ ಟ್ರಕ್ ಟ್ರೇಲರ್/ಮೊಬೈಲ್ ಕಿಚನ್ ಚಲಿಸುವ ಆಹಾರ ಸೇವಾ ಘಟಕವನ್ನು ಪರಿಶಿಷ್ಟ ಜಾತಿಯವರಿಗೆ ನೀಡಲಾಗುವುದು.
  • ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕ/ಯುವತಿಯವರು ಸಣ್ಣ ಕೈಗಾರಿಕೆ, ಸೇವಾ ಕ್ಷೇತ್ರ ಮತ್ತು ವ್ಯಾಪಾರಿ ಕ್ಷೇತ್ರಗಳಲ್ಲಿ ಸ್ವಯಂ ಉದ್ಯೋಗ ಘಟಕವನ್ನು ಆರಂಭಿಸಲು ನಿಗಮದ ಸಹಾಯಧನ ಮತ್ತು ಬ್ಯಾಂಕಿನ ಸಾಲ ವ್ಯವಸ್ಥೆಯೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು.

ಸಹಾಯಧನದ ಮೊತ್ತ ಎಷ್ಟು?

ಪರಿಶಿಷ್ಟ ಜಾತಿಗೆ ಸೇರಿದ ನಿರುದ್ಯೋಗಿ ಯುವಕರಿಗೆ ಇಲಾಖೆಯ ಆಯಾ ನಿಗಮಗಳ ಅಡಿಯಲ್ಲಿ ಘಟಕ ವೆಚ್ಚದ 75% ಅಥವಾ ಗರಿಷ್ಠ 4.00 ಲಕ್ಷ ರೂ.ಗಳವರೆಗೆ ಸಹಾಯಧನ ನೀಡಲಾಗುವುದು.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

  • ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು
  • ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಅರ್ಜಿದಾರರು 21 ವರ್ಷದಿಂದ 50 ವರ್ಷದವರೆಗಿನ ವಯೋಮಾನದವರಾಗಿರಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ರೂ. 1,50,000/- ಗ್ರಾಮೀಣ ಹಾಗೂ ರೂ. 2,00,000/- ನಗರ ಪ್ರದೇಶದವರಿಗೆ ಮಿತಿಯೊಳಗಿರಬೇಕು
  • ಅರ್ಜಿದಾರರು/ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ನಿಗಮ/ಸರ್ಕಾರದಿಂದ ರೂ. 1,00,000/- ಮೇಲ್ಪಟ್ಟು ಸೌಲಭ್ಯ ಪಡೆದಿದ್ದಲ್ಲಿ ಅಂತಹ ಫಲಾನುಭವಿಗಳು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ
  • ಅರ್ಜಿದಾರರು ಘಟಕವನ್ನು ಸ್ಥಾಪಿಸಲು ಅವಶ್ಯವಿರುವ ಸ್ಥಳಾವಕಾಶವನ್ನು ಹೊಂದಿರಬೇಕು.

ಷರತ್ತುಗಳು:-

  • ಅರ್ಜಿದಾರರು ಆಯ್ಕೆ ಸಮಿತಿಯಲ್ಲಿ ಆಯ್ಕೆಯಾಗಿರಬೇಕು.
  • ಮಂಜೂರಾತಿ ಪಡೆದ ಪಡೆದ ಫಲಾನುಭವಿಗಳು ಅನರ್ಹರು ಎಂದು ತಿಳಿದುಬಂದ ಸಂದರ್ಭದಲ್ಲಿ ಮಂಜೂರಾತಿಯನ್ನು ರದ್ದುಪಡಿಸಲಾಗುವುದು.

 

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ನೇರವಾಗಿ ತಮ್ಮ ಮೊಬೈಲ್ ಮೂಲಕ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಿ ಕೆಳಗಿನ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕವೂ ಅರ್ಜಿಯನ್ನು ಸಲ್ಲಿಸಬಹುದು.

  • ಹಂತ-1: ಅಧಿಕೃತ ವೆಬ್‌ಸೈಟ್‌ "https://swdcorp.karnataka.gov.in/ADCLPortal/schemedetail/MKF " ಮಾಡಿ ನಿಗಮದ ತಂತ್ರಾಂಶವನ್ನು ಪ್ರವೇಶ ಮಾಡಬೇಕು.
  • ಹಂತ 2: ತದನಂತರ ಇಲ್ಲಿ ಕೆಳಗ ಕಾಣಿಸುವ "ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಸೇವಾ ಸಿಂಧು ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು ಇಲ್ಲಿ ನಿಮ್ಮ ಮೊಬೈಲ್ ನಂಬರ್ ಮತ್ತು OTP ಅನ್ನು ಹಾಕಿ ಕೆಳಗೆ ಕಾಣುವ ಕ್ಯಾಪ್ಚ್ ಕೋಡ್ ನಮೂದಿಸಿ "Login" ಬಟನ್ ಮೇಲೆ ಒತ್ತಿ ಲಾಗಿನ್ ಅಗಬೇಕು.
  • ಹಂತ-3: "Login" ಬಟನ್ ಮೇಲೆ ಕ್ಲಿಕ್ ಮಾಡಿ ಮುಂದಿನ ಪೇಜ್ ಗೆ ಭೇಟಿ ಮಾಡಿದರೆ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಅಗತ್ಯವಿರುವ ದಾಖಲೆಗಳು

  • ಅಭ್ಯರ್ಥಿಯ ಆಧಾರ್ ಕಾರ್ಡ
  • ವಾಹನ ಚಾಲನಾ ಪರವಾನಗಿ
  • ಅಭ್ಯರ್ಥಿಯ ಭಾವಚಿತ್‌ರ
  • ಬ್ಯಾಂಕ್ ಪಾಸ್ ಬುಕ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ರೇಶನ್ ಕಾರ್ಡ
  • ಮೊಬೈಲ್ ನಂಬರ್

ಸಹಾಯಾಣಿ: ಯೋಜನೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ದಿನದ ಯಾವುದೇ ಸಮಯದಲ್ಲಿ ಸಹಾಯವಾಣಿ ಸಂಖ್ಯೆ 9482300400 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ

]]>
Mon, 12 Jan 2026 09:01:11 +0530 shivuagrico
Rastriya gokul mission&ರಾಷ್ಟ್ರೀಯ ಗೋಕುಲ ಮೀಷನ್ ಯೋಜನೆಯಡಿ ರೈತರಿಗೆ ಹೆಚ್ಚುವರಿ 21,500 ರವರೆಗೆ ಆದಾಯ https://krushirushi.in/Rastriya-gokul-mission-2384 https://krushirushi.in/Rastriya-gokul-mission-2384 Rastriya gokul mission-ರಾಷ್ಟ್ರೀಯ ಗೋಕುಲ ಮೀಷನ್ ಯೋಜನೆಯಡಿ ರೈತರಿಗೆ ಹೆಚ್ಚುವರಿ 21,500 ರವರೆಗೆ ಆದಾಯ

ಭಾರತದಲ್ಲಿ ಗೋವುಗಳನ್ನು ಪೂಜನೀಯ ದೃಷ್ಟಿಯಲ್ಲಿ ನೋಡಲಾಗುತ್ತದೆ. ಗೋವುಗಳು ರೈತರ ಜೀವನಾಡಿಯಾಗಿದೆ. ಹೀಗಾಗಿ ಗೋ ತಳಿಗಳ ಅಭಿವೃದ್ಧಿ ಹಾಗೂ ರೈತರಿಗೆ ಅನುಕೂಲಕ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ಗೋಕುಲ ಮಿಷನ್ ಎಂಬ ಮಹತ್ವಕಾಂಕ್ಷಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಇದು ಸ್ಥಳೀಯ ಹಸು ಮತ್ತು ಎಮ್ಮೆ ತಳಿಗಳ ಅಭಿವೃದ್ಧಿ, ಸಂರಕ್ಷಣೆ ಮತ್ತು ಹೈನುಗಾರಿಕೆಯನ್ನು ಲಾಭದಾಯಕವಾಗಿಸುವ ಗುರಿಯನ್ನು ಹೊಂದಿದೆ. ಪ್ರಸ್ತುತ ಈ ಯೋಜನೆಯು 2021-2026ರ ಅವಧಿಗೆ 'ರಾಷ್ಟ್ರೀಯ ಪಶುಧನ ವಿಕಾಸ ಯೋಜನೆ'ಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಏನಿದು ರಾಷ್ಟ್ರೀಯ ಗೋಕುಲ ಮಿಷನ್? ಇದರಿಂದ ರೈತರಿಗೆ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿಯೋಣ.

ಏನಿದು ರಾಷ್ಟ್ರೀಯ ಗೋಕುಲ ಮಿಷನ್?ರಾಷ್ಟ್ರೀಯ ಗೋಕುಲ ಮಿಷನ್ ಭಾರತ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಇದು 2014 ರಿಂದ 2026ರ ಅವಧಿಯವರೆಗೆ ಸ್ಥಳೀಯ ಗೋತಳಿಗಳ ಸಂರಕ್ಷಣೆ ಮತ್ತು ತಳಿ ಅಭಿವೃದ್ಧಿಗ ಒತ್ತು ನೀಡುತ್ತಿದೆ. ದೇಶೀಯ ಹಸು ಮತ್ತು ಎಮ್ಮೆಗಳ ತಳೀಯ ಸುಧಾರಣೆ ಮಾಡುವುದು, ಹಾಲಿನ ಉತ್ಪಾದಕತೆಯನ್ನು ಹೆಚ್ಚಿಸುವುದು ಮತ್ತು ಗ್ರಾಮೀಣ ರೈತರ, ವಿಶೇಷವಾಗಿ ಮಹಿಳಾ ಪಶುಪಾಲಕರ ಜೀವನೋಪಾಯವನ್ನು ಸುಧಾರಿಸುವುದು ಈ ಯೋಜನೆಯ ಪ್ರಮುಖ ಗುರಿಯಾಗಿದೆ. ಇದಕ್ಕಾಗಿ ಐವಿಎಫ್, ಲಿಂಗ-ವಿಂಗಡಿತ ವೀರ್ಯ ಮತ್ತು ರಾಷ್ಟ್ರವ್ಯಾಪಿ ಕೃತಕ ಗರ್ಭಧಾರಣೆ ಕಾರ್ಯಕ್ರಮಗಳಂತಹ ಸುಧಾರಿತ ವೈಜ್ಞಾನಿಕ ತಂತ್ರಜ್ಞಾನಗಳನ್ನು ಬಳಸಲಾಗುತ್ತಿದೆ. ಸುಸ್ಥಿರ ಹೈನುಗಾರಿಕೆಯನ್ನು ಉತ್ತೇಜಿಸುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಹಾಲಿನ ಲಭ್ಯತೆಯನ್ನು ಹೆಚ್ಚಿಸಲು ತ್ತು ಹೈನುಗಾರಿಕೆಯನ್ನು ಲಾಭದಾಯಕ ಉದ್ಯಮವನ್ನಾಗಿ ಮಾಡಲು ಈ ಮಿಷನ್ ಶ್ರಮಿಸುತ್ತಿದೆ.

ಯೋಜನೆಯ ಪ್ರಮುಖ ಉದ್ದೇಶಗಳು

  1. ಉತ್ಪಾದಕತೆ ಹೆಚ್ಚಳ: ಸುಧಾರಿತ ತಂತ್ರಜ್ಞಾನಗಳನ್ನು ಬಳಸಿ ಹೈನುರಾಸುಗಳ ಹಾಲು ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವುದು.
  2. ತಳಿ ಸುಧಾರಣೆ: ತಳೀಯವಾಗಿ ಉತ್ತಮ ಗುಣಮಟ್ಟದ ಹೋರಿಗಳನ್ನು ಸಂತಾನೋತ್ಪತ್ತಿಗೆ ಬಳಸುವುದು.
  3. ಕೃತಕ ಗರ್ಭಧಾರಣೆ ವಿಸ್ತರಣೆ: ರೈತರ ಮನೆ ಬಾಗಿಲಿಗೇ ಗುಣಮಟ್ಟದ ಕೃತಕ ಗರ್ಭಧಾರಣೆ ಸೇವೆಗಳನ್ನು ತಲುಪಿಸುವುದು.
  4. ತಳಿ ಸಂರಕ್ಷಣೆ: ದೇಶೀಯ ಗೋತಳಿಗಳು ಮತ್ತು ಎಮ್ಮೆ ತಳಿಗಳನ್ನು ವೈಜ್ಞಾನಿಕವಾಗಿ ಸಂರಕ್ಷಿಸುವುದು.
  5. ರೈತರ ಸಬಲೀಕರಣ: ಸಣ್ಣ ರೈತರು ಮತ್ತು ಮಹಿಳಾ ಪಶುಪಾಲಕರಿಗೆ ಹೈನುಗಾರಿಕೆಯನ್ನು ಹೆಚ್ಚು ಲಾಭದಾಯಕವಾಗಿಸುವುದು.


ರಾಷ್ಟ್ರೀಯ ಗೋಕುಲ ಮಿಷನ್‌ನ ಚಟುವಟಿಕೆಗಳು

  • ರಾಷ್ಟ್ರವ್ಯಾಪಿ ಕೃತಕ ಗರ್ಭಧಾರಣೆ ಕಾರ್ಯಕ್ರಮ: ಆಯ್ದ ಜಿಲ್ಲೆಗಳಲ್ಲಿ ರೈತರ ಮನೆ ಬಾಗಿಲಿಗೆ ಉಚಿತವಾಗಿ ಕೃತಕ ಗರ್ಭಧಾರಣೆ ಸೇವೆ. ಇದನ್ನು 'ಭಾರತ್ ಪಶುಧನ್' ಆ್ಯಪ್ ಮೂಲಕ ಟ್ರ್ಯಾಕ್ ಮಾಡಲಾಗುತ್ತದೆ.
  • ಲಿಂಗ-ವಿಂಗಡಿತ ವೀರ್ಯ: ಈ ತಂತ್ರಜ್ಞಾನದ ಮೂಲಕ 90% ಕ್ಕಿಂತ ಹೆಚ್ಚು ನಿಖರತೆಯೊಂದಿಗೆ ಹೆಣ್ಣು ಕರುಗಳನ್ನೇ ಪಡೆಯಬಹುದು. ಇದು ಬೀಡಾಡಿ ದನಗಳ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.
  • IVF ತಂತ್ರಜ್ಞಾನ: ಗರ್ಭಧಾರಣೆಯನ್ನು ಖಚಿತಪಡಿಸಿಕೊಳ್ಳಲು ಐವಿಎಫ್ ತಂತ್ರಜ್ಞಾನಕ್ಕೆ ಉತ್ತೇಜನ.
  • ಗೋಕುಲ ಗ್ರಾಮಗಳು: ಸ್ಥಳೀಯ ತಳಿಗಳ ಸಂರಕ್ಷಣೆಗಾಗಿ ಸ್ಥಾಪಿಸಲಾದ ಸಮಗ್ರ ಅಭಿವೃದ್ಧಿ ಕೇಂದ್ರಗಳು.
  • ಡಿಜಿಟಲ್ ಟ್ರೇಸಿಬಿಲಿಟಿ: 34 ಕೋಟಿಗೂ ಹೆಚ್ಚು ಪಶುಗಳನ್ನು 'ಭಾರತ್ ಪಶುಧನ್' ಆ್ಯಪ್ ಅಡಿಯಲ್ಲಿ ನೋಂದಾಯಿಸಿ ಅವುಗಳ ಆರೋಗ್ಯ ಮತ್ತು ಸಂತಾನೋತ್ಪತ್ತಿ ಮಾಹಿತಿಯನ್ನು ನಿರ್ವಹಿಸಲಾಗುತ್ತದೆ.
  • ಗೌ ಚಿಪ್ ಮತ್ತು ಮಹಿಷ್ ಚಿಪ್: ಉತ್ತಮ ಗುಣಮಟ್ಟದ ಹೋರಿಗಳನ್ನು ಚಿಕ್ಕ ವಯಸ್ಸಿನಲ್ಲೇ ಗುರುತಿಸಲು ಅಭಿವೃದ್ಧಿಪಡಿಸಲಾದ ಜಿನೋಮಿಕ್ ಚಿಪ್‌ಗಳು.


ಫಲಾನುಭವಿಗಳು ಮತ್ತು ಪ್ರಯೋಜನಗಳು

  • ಫಲಾನುಭವಿಗಳು: ಈ ಯೋಜನೆಯು ಜಾತಿ, ವರ್ಗ ಅಥವಾ ಲಿಂಗದ ತಾರತಮ್ಯವಿಲ್ಲದೆ ಎಲ್ಲಾ ಡೈರಿ ರೈತರಿಗೆ ಮುಕ್ತವಾಗಿದೆ.
  • ಉಚಿತ ಸೇವೆಗಳು: ರಾಷ್ಟ್ರವ್ಯಾಪಿ ಕೃತಕ ಗರ್ಭಧಾರಣೆ ಕಾರ್ಯಕ್ರಮದ ಅಡಿಯಲ್ಲಿ ರೈತರ ಮನೆ ಬಾಗಿಲಿಗೆ ಉಚಿತವಾಗಿ ಕೃತಕ ಗರ್ಭಧಾರಣೆ ಸೇವೆಗಳನ್ನು ಒದಗಿಸಲಾಗುತ್ತದೆ.
  • ಆದಾಯ ವೃದ್ಧಿ: ಈ ಕಾರ್ಯಕ್ರಮದ ಮೂಲಕ ಸುಮಾರು 1.5 ಕೋಟಿ ರೈತರು ಪ್ರಯೋಜನ ಪಡೆಯಲಿದ್ದು, ಮೂರು ವರ್ಷಗಳ ನಂತರ ರೈತರ ವಾರ್ಷಿಕ ಆದಾಯ ಸರಾಸರಿ 21,500 ರೂಪಾಯಿಗಳಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
  • IVF ಸಬ್ಸಿಡಿ: ತ್ವರಿತ ತಳಿ ಸುಧಾರಣಾ ಕಾರ್ಯಕ್ರಮದ ಅಡಿಯಲ್ಲಿ ಐವಿಎಫ್ ತಂತ್ರಜ್ಞಾನ ಬಳಸಿ ಪಡೆಯುವ ಪ್ರತಿ ಖಚಿತ ಗರ್ಭಧಾರಣೆಗೆ ರೈತರಿಗೆ 5,000 ರೂಪಾಯಿಗಳ ಸಬ್ಸಿಡಿ ನೀಡಲಾಗುತ್ತದೆ.
  • ಹೆಚ್ಚುವರಿ ಲಾಭ: ಐವಿಎಫ್ ತಂತ್ರಜ್ಞಾನ ಬಳಸುವ ರೈತರ ಆದಾಯವು ಮೂರು ವರ್ಷಗಳ ನಂತರ ವಾರ್ಷಿಕವಾಗಿ 60,000 ರೂ.ಗಳವರೆಗೆ ಹೆಚ್ಚಾಗುವ ಸಾಧ್ಯತೆಯಿದೆ.
  • ಲಿಂಗ-ವಿಂಗಡಿತ ವೀರ್ಯ: ಲಿಂಗ-ವಿಂಗಡಿತ ವೀರ್ಯದ ಮೂಲಕ ಖಚಿತ ಗರ್ಭಧಾರಣೆ ಪಡೆಯುವ ರೈತರಿಗೆ 750 ರೂಪಾಯಿಗಳ ಸಬ್ಸಿಡಿ ನೀಡಲಾಗುವುದು.
  • ಉದ್ಯಮಿಗಳಿಗೆ ನೆರವು: 'ಹಬ್ ಮತ್ತು ಸ್ಪೋಕ್' ಮಾದರಿಯಲ್ಲಿ ತಳಿ ವರ್ಧನಾ ಫಾರ್ಮ್‌ಗಳನ್ನು ಸ್ಥಾಪಿಸಲು 2 ಕೋಟಿ ರೂ.ವರೆಗೆ ಬೃಹತ್ ಸಬ್ಸಿಡಿ ಲಭ್ಯವಿದೆ.
  • ಸಾಲ ಸಹಾಯಧನ: ಹೆಚ್ಚಿನ ಹಾಲು ನೀಡುವ ಗುಣಮಟ್ಟದ ಹೆಣ್ಣು ಕರುಗಳನ್ನು ಖರೀದಿಸಲು ಬ್ಯಾಂಕ್ ಸಾಲ ಪಡೆದ ರೈತರಿಗೆ 3% ಬಡ್ಡಿ ರಿಯಾಯಿತಿ ಸೌಲಭ್ಯವನ್ನು ಈ ಯೋಜನೆಯು ಒದಗಿಸುತ್ತದೆ.

ರಾಷ್ಟ್ರೀಯ ಗೋಕುಲ ಮಿಷನ್‌ ಸಹಾಯಧನ ವಿವರ

ಯೋಜನೆ / ಘಟಕ ಸಬ್ಸಿಡಿ ಅಥವಾ ಆರ್ಥಿಕ ನೆರವು
ಸಾಮಾನ್ಯ ಘಟಕಗಳು ಭಾರತ ಸರ್ಕಾರದಿಂದ 100% ಅನುದಾನ (ಕೆಲವು ವೈಯಕ್ತಿಕ ಘಟಕಗಳನ್ನು ಹೊರತುಪಡಿಸಿ).
ತ್ವರಿತ ತಳಿ ಸುಧಾರಣೆ ಪ್ರತಿ ಖಚಿತ IVF ಗರ್ಭಧಾರಣೆಗೆ 5,000 ರೂ. ಪ್ರೋತ್ಸಾಹಧನ.
ಲಿಂಗ-ವಿಂಗಡಿತ ವೀರ್ಯ ವೀರ್ಯದ ವೆಚ್ಚದ ಮೇಲೆ 50% ವರೆಗೆ ಸಬ್ಸಿಡಿ (ಹೆಣ್ಣು ಕರುಗಳ ಜನನ ಖಚಿತಪಡಿಸಲು).
ತಳಿ ವರ್ಧನಾ ಫಾರ್ಮ್‌ಗಳು ಉದ್ಯಮಿಗಳು, SHG, FPO ಗಳಿಗೆ 50% ಬಂಡವಾಳ ಸಬ್ಸಿಡಿ (ಗರಿಷ್ಠ 2 ಕೋಟಿ ರೂ.ವರೆಗೆ).
ಹೆಫರ್ (ಹೆಣ್ಣು ಕರು) ಸಾಕಾಣಿಕೆ ಕೇಂದ್ರಗಳು 15,000 ಕರುಗಳ ಸಾಮರ್ಥ್ಯದ ಕೇಂದ್ರ ಸ್ಥಾಪನೆಗೆ 35% ಸಹಾಯಧನ.
ಹೆಚ್ಚಿನ ಇಳುವರಿಯ IVF ಹೆಣ್ಣು ಕರುಗಳು

ಇವುಗಳ ಖರೀದಿಗೆ ಪಡೆದ ಬ್ಯಾಂಕ್ ಸಾಲದ ಮೇಲೆ 3% ಬಡ್ಡಿ ರಿಯಾಯಿತಿ.

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲಿಗೆ ನೀವು ಯೋಜನೆಯ ಯಾವ ಭಾಗದ ಅಡಿಯಲ್ಲಿ (ಉದಾಹರಣೆಗೆ: ಗೋಕುಲ ಗ್ರಾಮ, ಮೈತ್ರಿ ತರಬೇತಿ, ಅಥವಾ ತಳಿ ಅಭಿವೃದ್ಧಿ) ಪ್ರಯೋಜನ ಪಡೆಯಲು ಬಯಸುತ್ತೀರಿ ಎಂಬುದನ್ನು ನಿರ್ಧರಿಸಿ.
  • ರಾಷ್ಟ್ರೀಯ ಪಶುಧನ ಮಿಷನ್‌ನ ಅಧಿಕೃತ ಪೋರ್ಟಲ್ nlm.udyamimitra.in ಅಥವಾ ನಿಮ್ಮ ರಾಜ್ಯದ ಪಶುಸಂಗೋಪನಾ ಇಲಾಖೆಯ ವೆಬ್‌ಸೈಟ್‌ https://ahvs.karnataka.gov.in/ ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಿ ಮತ್ತು ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕವೇ ಸಲ್ಲಿಸಿ.
  • ನಿಮ್ಮ ಅರ್ಜಿಯನ್ನು ರಾಜ್ಯ ಅನುಷ್ಠಾನ ಏಜೆನ್ಸಿಯು ಕೂಲಂಕಷವಾಗಿ ಪರಿಶೀಲಿಸುತ್ತದೆ. ಅರ್ಹ ಯೋಜನೆಗಳನ್ನು ಸಾಲದ ಮಂಜೂರಾತಿಗಾಗಿ ಬ್ಯಾಂಕ್‌ಗಳಿಗೆ ಶಿಫಾರಸು ಮಾಡಲಾಗುತ್ತದೆ.
  • ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿಯು ಯೋಜನೆಯನ್ನು ಪರಿಶೀಲಿಸಿ ಅಂತಿಮ ಅನುಮೋದನೆಗಾಗಿ ಶಿಫಾರಸು ಮಾಡುತ್ತದೆ.
  • ಅಂತಿಮವಾಗಿ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯು ಯೋಜನೆಯನ್ನು ಅನುಮೋದಿಸುತ್ತದೆ, ನಂತರ ಸಬ್ಸಿಡಿ ಹಣವನ್ನು ವಿವಿಧ ಕಂತುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಅಗತ್ಯವಿರುವ ದಾಖಲೆಗಳು

  • ಆಧಾರ್ ಕಾರ್ಡ್.
  • ವಾಸಸ್ಥಳದ ಪುರಾವೆ.
  • ಆದಾಯ ಪ್ರಮಾಣಪತ್ರ.
  • ಬ್ಯಾಂಕ್ ಖಾತೆ ವಿವರಗಳು (ಸಬ್ಸಿಡಿ ವರ್ಗಾವಣೆಗಾಗಿ)
  • ಯೋಜನಾ ವರದಿ (- ಅನ್ವಯವಾಗುವಲ್ಲಿ)

ಪ್ರಶ್ನೋತ್ತರಗಳು

  1. ರಾಷ್ಟ್ರೀಯ ಗೋಕುಲ್‌ ಮಿಷನ್‌ ಯೋಜನೆಗೆ ಯಾವ ಸಚಿವಾಲಯವು ಜವಾಬ್ದಾರಿಯಾಗಿದೆ?
    ಕೇಂದ್ರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು ಈ ಯೋಜನೆಯನ್ನು ಜಾರಿಗೆ ತರುವ ನೋಡಲ್ ಸಚಿವಾಲಯವಾಗಿದೆ.
  2. ಈ ಯೋಜನೆಯ ಅವಧಿ ಎಷ್ಟು?
    2021ರಲ್ಲಿ ಪರಿಷ್ಕೃತಗೊಂಡ ಈ ಮಿಷನ್, ಪ್ರಸ್ತುತ 'ರಾಷ್ಟ್ರೀಯ ಪಶುಧನ ವಿಕಾಸ ಯೋಜನೆ'ಯ ಅಡಿಯಲ್ಲಿ 2025-26 ರವರೆಗೆ ಕಾರ್ಯನಿರ್ವಹಿಸಲಿದೆ.
  3. ಈ ಯೋಜನೆಯ ಪ್ರಾಥಮಿಕ ಫಲಾನುಭವಿಗಳು ಯಾರು?
    ಸಣ್ಣ ಮತ್ತು ಅತಿಸಣ್ಣ ರೈತರು ಹಾಗೂ ಪಶುಸಂಗೋಪನೆಯಲ್ಲಿ 70% ಕ್ಕಿಂತ ಹೆಚ್ಚು ತೊಡಗಿಸಿಕೊಂಡಿರುವ ಮಹಿಳೆಯರು ಈ ಯೋಜನೆಯ ಪ್ರಮುಖ ಫಲಾನುಭವಿಗಳು. ಜೊತೆಗೆ, ಸಂಬಂಧಿತ ಮೂಲಸೌಕರ್ಯಗಳನ್ನು ಸ್ಥಾಪಿಸುವ ಉದ್ಯಮಿಗಳು ಸಹ ಸಬ್ಸಿಡಿಗಳ ಲಾಭವನ್ನು ಪಡೆಯಬಹುದು.
  4. ಒಬ್ಬ ರೈತನು ಈ ಪ್ರಯೋಜನಗಳನ್ನು ಅಥವಾ ಸಬ್ಸಿಡಿಗಳನ್ನು ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?
    ಫಲಾನುಭವಿಗಳು ರಾಜ್ಯ ಪಶುಧನ ಅಭಿವೃದ್ಧಿ ಮಂಡಳಿಗಳು ಅಥವಾ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಯಂತಹ ರಾಜ್ಯ ಅನುಷ್ಠಾನ ಸಂಸ್ಥೆಗಳಲ್ಲಿ ನೋಂದಾಯಿಸಿಕೊಳ್ಳಬೇಕು. ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಸ್ಥಳೀಯ ಪಶುಸಂಗೋಪನಾ ಕಚೇರಿಗಳ ಮೂಲಕ ಆಫ್‌ಲೈನ್‌ನಲ್ಲಿ ಸಲ್ಲಿಸಬಹುದು.
  5. ರಾಷ್ಟ್ರೀಯ ಗೋಕುಲ್‌ ಮಿಷನ್‌ ಜೊತೆಗೆ ಉಲ್ಲೇಖಿಸಲಾದ "ರಾಷ್ಟ್ರೀಯ ಡಿಜಿಟಲ್ ಪಶುಧನ ಮಿಷನ್ " ಎಂದರೇನು?
    ರಾಷ್ಟ್ರೀಯ ಡಿಜಿಟಲ್ ಪಶುಧನ ಮಿಷನ್ ಎಂಬುದು RGM ಅಡಿಯಲ್ಲಿ ತರಲಾದ ಒಂದು ಡಿಜಿಟಲ್ ಉಪಕ್ರಮವಾಗಿದ್ದು, ಇದು 'ಭಾರತ್ ಪಶುಧನ್' ಎಂಬ ರಾಷ್ಟ್ರೀಯ ಡೇಟಾಬೇಸ್ ಅನ್ನು ನಿರ್ಮಿಸುತ್ತದೆ. ಇದರ ಅಡಿಯಲ್ಲಿ ಪ್ರತಿ ಪ್ರಾಣಿಗೆ 12-ಅಂಕಿಗಳ ವಿಶಿಷ್ಟ ಗುರುತಿನ ಸಂಖ್ಯೆಯನ್ನು (ID) ನೀಡಲಾಗುತ್ತದೆ, ಇದು ಪ್ರಾಣಿಗಳ ಪತ್ತೆಹಚ್ಚುವಿಕೆಯನ್ನು ಸುಲಭಗೊಳಿಸುತ್ತದೆ ಮತ್ತು ಗುಣಮಟ್ಟದ ಡೈರಿ ಉತ್ಪನ್ನಗಳ ರಫ್ತಿಗೆ ಉತ್ತೇಜನ ನೀಡುತ್ತದೆ.
  6. ನನ್ನ ಹಸು/ಎಮ್ಮೆಗೆ ಈಗಾಗಲೇ ವಿಮೆ ಇದ್ದರೆ, ನಾನು RGM ಸೌಲಭ್ಯಗಳನ್ನು ಪಡೆಯಬಹುದೇ?
    ಹೌದು. ವಿಮೆ ಮತ್ತು ತಳಿ ಅಭಿವೃದ್ಧಿ ಸೌಲಭ್ಯಗಳು ವಿಭಿನ್ನವಾಗಿವೆ. ನೀವು RGM ಅಡಿಯಲ್ಲಿ ಉಚಿತ ಕೃತಕ ಗರ್ಭಧಾರಣೆ ಅಥವಾ ಐವಿಎಫ್ (IVF) ಸೌಲಭ್ಯಗಳನ್ನು ಪಡೆಯಲು ಯಾವುದೇ ಅಡ್ಡಿಯಿಲ್ಲ.
  7. ಈ ಯೋಜನೆಯಲ್ಲಿ ಕೇವಲ ಹಸುಗಳಿಗೆ ಮಾತ್ರ ಆದ್ಯತೆ ಇದೆಯೇ ಅಥವಾ ಎಮ್ಮೆಗಳಿಗೂ ಅವಕಾಶವಿದೆಯೇ?
    ಈ ಯೋಜನೆಯು ಹಸು ಮತ್ತು ಎಮ್ಮೆಗಳೆರಡಕ್ಕೂ ಅನ್ವಯಿಸುತ್ತದೆ. ವಿಶೇಷವಾಗಿ ಮುರ್ರಾ, ಜಾಫ್ರಾಬಾದಿಯಂತಹ ಸುಧಾರಿತ ಎಮ್ಮೆ ತಳಿಗಳ ಸಂರಕ್ಷಣೆ ಮತ್ತು ಉತ್ಪಾದಕತೆ ಹೆಚ್ಚಳಕ್ಕೆ ಈ ಮಿಷನ್ ಒತ್ತು ನೀಡುತ್ತದೆ.

]]>
Sun, 11 Jan 2026 07:49:23 +0530 shivuagrico
Rasthe veer yojane&ರಸ್ತೆಯ ವೀರ ಯೋಜನೆ: ಸೂಪರ್ ಹೀರೋಗಳಾಗಿ ಅಪಘಾತ ಸಂತ್ರಸ್ತರ ಪ್ರಾಣ ಉಳಿಸಿದವರಿಗೆ ಸಿಗಲಿದೆ 25,000 ರೂ. ನಗದು ಬಹುಮಾನ https://krushirushi.in/Rasthe-veer-yojane-2383 https://krushirushi.in/Rasthe-veer-yojane-2383 Rasthe veer yojane-ರಸ್ತೆಯ ವೀರ ಯೋಜನೆ: ಸೂಪರ್ ಹೀರೋಗಳಾಗಿ ಅಪಘಾತ ಸಂತ್ರಸ್ತರ ಪ್ರಾಣ ಉಳಿಸಿದವರಿಗೆ ಸಿಗಲಿದೆ 25,000 ರೂ. ನಗದು ಬಹುಮಾನ

ಭಾರತದಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡಲು ಜನರನ್ನು ಪ್ರೋತ್ಸಾಹಿಸಲು 'ರಾಹ್-ವೀರ್' ಅಥವಾ ರಸ್ತೆಯ ವೀರ ಯೋಜನೆ ಜಾರಿಯಾಗಿದೆ. ಅಪಘಾತವಾದ ಒಂದು ಗಂಟೆಯೊಳಗೆ ಸಂತ್ರಸ್ತರನ್ನು ಆಸ್ಪತ್ರೆಗೆ ಸೇರಿಸುವವರಿಗೆ 25,000 ರೂ. ಬಹುಮಾನ ಮತ್ತು ಕಾನೂನು ರಕ್ಷಣೆ ನೀಡಲಾಗುತ್ತದೆ. ಇದು ಅಮೂಲ್ಯ ಜೀವಗಳನ್ನು ಉಳಿಸಲು ಮತ್ತು 'ಉತ್ತಮ ಸಮರಿಟನ್' ಗಳನ್ನು ಗೌರವಿಸಲು ಉದ್ದೇಶಿಸಿದೆ. ಈ ಕುರಿತ ವಿವರಗಳು ಇಲ್ಲಿವೆ.

ಭಾರತದಲ್ಲಿ ರಸ್ತೆ ಅಪಘಾತದಿಂದಾಗಿ ಲಕ್ಷಾಂತರ ಮಂದಿ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಂಕಿಅಂಶಗಳ ಪ್ರಕಾರ, ಪ್ರತಿ ವರ್ಷ ಅಂದಾಜು 45 ಲಕ್ಷ ಅಪಘಾತಗಳು ನಡೆಯುತ್ತಿದ್ದು, ಪ್ರತಿ ಕೆಲವು ನಿಮಿಷಕ್ಕೆ ಒಬ್ಬರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅದರೆ, ಸರಿಯಾದ ಕ್ಷಣದಲ್ಲಿ ಚಿಕಿತ್ಸೆ ನೀಡಿದರೆ, ಅಮೂಲ್ಯ ಜೀವವನ್ನು ಉಳಿಸಬಹುದು. ಅಪಘಾತ ನಡೆದ ನಂತರದ ಮೊದಲ 60 ನಿಮಿಷಗಳನ್ನು 'ಗೋಲ್ಡನ್ ಅವರ್' ಎನ್ನಲಾಗುತ್ತದೆ. ಈ ಸಮಯದಲ್ಲಿ ಸಿಗುವ ತುರ್ತು ಚಿಕಿತ್ಸೆ ಸಾವು ಮತ್ತು ಶಾಶ್ವತ ಅಂಗವೈಕಲ್ಯವನ್ನು ತಡೆಯಬಲ್ಲದು. ಆದರೆ, ಪೊಲೀಸರ ವಿಚಾರಣೆ ಅಥವಾ ಕಾನೂನು ಸಂಕಷ್ಟಗಳಿಗೆ ಹೆದರಿ ಅನೇಕರು ಸಹಾಯ ಮಾಡಲು ಮುಂದೆ ಬರುತ್ತಿರಲಿಲ್ಲ. ಈ ಭಯವನ್ನು ಹೋಗಲಾಡಿಸಲು ಭಾರತ ಸರ್ಕಾರವು 'ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ 2019' ರ ಸೆಕ್ಷನ್ 134A ಅಡಿಯಲ್ಲಿ 'ರಸ್ತೆಯ ವೀರ' ಯೋಜನೆಯನ್ನು ಜಾರಿಗೆ ತಂದಿದೆ.

ಏನಿದು 'ರಸ್ತೆಯ ವೀರ' ಯೋಜನೆ?

61

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಮಹತ್ವಾಕಾಂಕ್ಷೆಯ ಯೋಜನೆಯಾದ 'ರಾಹ್-ವೀ‌ರ್' ಅಥವಾ “ರಸ್ತೆಯ ವೀರ' ಯೋಜನೆಯು ರಸ್ತೆ ಅಪಘಾತದ ಸಂತ್ರಸ್ತರಿಗೆ ತುರ್ತು ಸಂದರ್ಭದಲ್ಲಿ ನೆರವಾಗುವ ಸಾರ್ವಜನಿಕರನ್ನು ಉತ್ತೇಜಿಸುವ ಮತ್ತು ರಕ್ಷಿಸುವ ಉದ್ದೇಶವನ್ನು ಹೊಂದಿದೆ. ಈ ಯೋಜನೆಯಡಿ ಅಪಘಾತಕ್ಕೀಡಾದವರನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಸೇರಿಸುವ ವ್ಯಕ್ತಿಗಳಿಗೆ ಕಾನೂನು ಕಿರುಕುಳದಿಂದ ಸಂಪೂರ್ಣ ರಕ್ಷಣೆ ನೀಡಲಾಗುವುದು ಮಾತ್ರವಲ್ಲದೆ, ಅವರ ವೈಯಕ್ತಿಕ ವಿವರಗಳನ್ನು ನೀಡುವಂತೆ ಅಥವಾ ವಿಚಾರಣೆಗಾಗಿ ಅನಗತ್ಯವಾಗಿ ಕಾಯುವಂತೆ ಒತ್ತಾಯಿಸುವಂತಿಲ್ಲ. ಸಂತ್ರಸ್ತರ ಪ್ರಾಣ ಉಳಿಸಲು ಧೈರ್ಯದಿಂದ ಮುಂದೆ ಬರುವ ಇಂತಹ 'ಉತ್ತಮ ಸಮರಿಟನ್'ಗಳ ಘನತೆ ಮತ್ತು ಗೌಪ್ಯತೆಯನ್ನು ಕಾಪಾಡುವುದರ ಜೊತೆಗೆ, ಅವರಿಗೆ ಆರ್ಥಿಕ ಬಹುಮಾನ ಮತ್ತು ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ.

ಸಮರಿಟನ್‌ಗಳಿಗೆ ಬಹುಮಾನದ ಮೊತ್ತ ಎಷ್ಟು?

ಅಪಘಾತಕ್ಕೀಡಾದ ಸಂತ್ರಸ್ತನನ್ನು 'ಗೋಲ್ಡನ್‌ ಅವ‌ರ್' (ಅಪಘಾತವಾದ ಒಂದು ಗಂಟೆಯೊಳಗೆ) ಆಸ್ಪತ್ರೆಗೆ ಸೇರಿಸುವ ವ್ಯಕ್ತಿಗೆ ಪ್ರತಿ ಘಟನೆಗೆ 25,000 ರೂ. ನಗದು ಬಹುಮಾನ ನೀಡಲಾಗುತ್ತದೆ.

ಈ ನಗದು ಬಹುಮಾನದ ಜೊತೆಗೆ ವ್ಯಕ್ತಿಯ ಸೇವೆಗಾಗಿ ಗೌರವಾನ್ವಿತ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ.

ಒಬ್ಬ ವ್ಯಕ್ತಿಯು ಒಂದು ವರ್ಷದಲ್ಲಿ ಗರಿಷ್ಠ 5 ಬಾರಿ ಈ ಆರ್ಥಿಕ ಬಹುಮಾನ ಮತ್ತು ಪ್ರಶಂಸನಾ ಪತ್ರವನ್ನು ಪಡೆಯಲು ಅವಕಾಶವಿದೆ.

ದೇಶಾದ್ಯಂತ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಮೊದಲ 10 'ರಾಹ್-ವೀರ್'ಗಳನ್ನು ರಾಷ್ಟ್ರ ಮಟ್ಟದಲ್ಲಿ ಆಯ್ಕೆ ಮಾಡಿ, ಅವರಿಗೆ ತಲಾ 1,00,000 ರೂ. ಹೆಚ್ಚುವರಿ ಬಹುಮಾನ ನೀಡಲಾಗುತ್ತದೆ.

]]>
Sat, 10 Jan 2026 09:40:07 +0530 shivuagrico
Free fodder seeds&ಉಚಿತ ಮೇವಿನ ಬೀಜಗಳವಿತರಣೆ https://krushirushi.in/Free-fodder-seeds-2382 https://krushirushi.in/Free-fodder-seeds-2382 Free fodder seeds-ಉಚಿತ ಮೇವಿನ ಬೀಜಗಳವಿತರಣೆ


ಕರ್ನಾಟಕ ಸರ್ಕಾರವು ರೈತರಿಗೆ ಉಚಿತವಾಗಿ ಸುಧಾರಿತ ಮೇವಿನ ಬೀಜಗಳನ್ನು ನೀಡುತ್ತಿದೆ. ಇದರಿಂದ ಜಾನುವಾರುಗಳ ಆರೋಗ್ಯ ಸುಧಾರಿಸಿ ಹಾಲಿನ ಇಳುವರಿ ಹೆಚ್ಚುತ್ತದೆ. ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಆದ್ಯತೆ ನೀಡಲಾಗಿದೆ. ಅರ್ಹ ರೈತರು ತಮ್ಮ ಹತ್ತಿರದ ಪಶು ಆಸ್ಪತ್ರೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಇದು ರೈತರ ವೆಚ್ಚ ಕಡಿಮೆ ಮಾಡಿ ಸ್ವಾವಲಂಬನೆಗೆ ನೆರವಾಗುತ್ತದೆ. ಈ ಕುರಿತ ಮಾಹಿತಿಗಳು ಇಲ್ಲಿವೆ.

ಕೃಷಿ ಪರಿಕರಗಳ ಖರೀದಿ ಹಾಗೂ ಮಾರಾಟಕ್ಕಾಗಿ ನಿಮ್ಮ ಮನೆಬಾಗಿಲಿಗೆ ಬರಲಿದೆ krishibuy.in 

https://krishibuy.in/product/trichoderma/

ಜಾನುವಾರುಗಳ ಆರೋಗ್ಯ ಮತ್ತು ಹೈನುಗಾರಿಕೆಯ ಲಾಭವು ಅವುಗಳಿಗೆ ನೀಡುವ ಆಹಾರದ ಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ. ಆದರೆ, ಜಾನುವಾರುಗಳಿಗೆ ಹಣಕೊಟ್ಟು ಮೇವು ತರುವುದು ರೈತರಿಗೆ ಕಷ್ಟಕರ. ಇದನ್ನು ಮನಗಂಡ ಕರ್ನಾಟಕ ಸರ್ಕಾರವು ರೈತರಿಗೆ ಉಚಿತವಾಗಿ ಸುಧಾರಿತ ತಳಿಗಳ ಮೇವಿನ ಬೀಜಗಳನ್ನು ವಿತರಿಸುವ ಯೋಜನೆಯನ್ನು ಜಾರಿಗೆ ತಂದಿದೆ. ಸರ್ಕಾರದಿಂದ ಜಾನುವಾರುಗಳಿಗೆ ಉಚಿತವಾಗಿ ಮೇವಿನ ಕಿರು ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ.

ಏನಿದು ಮೇವಿನ ಕಿರು ಪೊಟ್ಟಣಗಳ ವಿತರಣೆ ಯೋಜನೆ?

ಕರ್ನಾಟಕ ಸರ್ಕಾರದ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಜಾರಿಗೆ ತಂದಿರುವ 'ಮೇವಿನ ಕಿರು ಪೊಟ್ಟಣಗಳ ವಿತರಣೆ' ಯೋಜನೆಯು ಹೈನುಗಾರಿಕೆ ಮಾಡುವ ರೈತರಿಗೆ ಉಚಿತವಾಗಿ ಸುಧಾರಿತ ತಳಿಗಳ ಮೇವಿನ ಬೀಜಗಳನ್ನು ಒದಗಿಸುವ ಮಹತ್ವದ ಯೋಜನೆಯಾಗಿದ್ದು, ಇದು ಜಾನುವಾರುಗಳ ಪೌಷ್ಟಿಕಾಂಶವನ್ನು ಹೆಚ್ಚಿಸಿ ಹಾಲಿನ ಇಳುವರಿಯನ್ನು ಸುಧಾರಿಸುವ ಉದ್ದೇಶ ಹೊಂದಿದೆ. ಈ ಯೋಜನೆಯಡಿ ಆಫ್ರಿಕನ್ ಟಾಲ್ ಮೆಕ್ಕೆಜೋಳ, ಲುಸರ್ನ್, ಬರಸೀಮ್, ಓಟ್ಸ್ ಮತ್ತು ವಿವಿಧ ಜೋಳದ ತಳಿಗಳ ಬೀಜಗಳನ್ನು ಖಾರಿಫ್ ಮತ್ತು ರಬಿ ಹಂಗಾಮುಗಳಲ್ಲಿ ರೈತರಿಗೆ ಉಚಿತವಾಗಿ ವಿತರಿಸಲಾಗುತ್ತದೆ. ಒಮ್ಮೆ ಸೌಲಭ್ಯ ಪಡೆದ ಫಲಾನುಭವಿಗಳು ಒಂದು ವರ್ಷದ ನಂತರ ಮತ್ತೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಯೋಜನೆಯ ಉದ್ದೇಶಗಳು

  • ಗುಣಮಟ್ಟದ ಮೇವು: ಈ ಯೋಜನೆಯು ರೈತರು ತಮ್ಮ ಸ್ವಂತ ಹೊಲಗಳಲ್ಲಿಯೇ ಸುಧಾರಿತ ತಳಿಗಳ ಮತ್ತು ಉತ್ತಮ ಗುಣಮಟ್ಟದ ಹಸಿರು ಮೇವನ್ನು ಬೆಳೆಯಲು ಅಗತ್ಯ ಪ್ರೋತ್ಸಾಹ ಹಾಗೂ ನೆರವು ನೀಡುತ್ತದೆ.
  • ಜಾನುವಾರುಗಳ ಆರೋಗ್ಯ: ಜಾನುವಾರುಗಳಿಗೆ ಪೌಷ್ಟಿಕಾಂಶಯುಕ್ತ ಹಸಿರು ಮೇವನ್ನು ಒದಗಿಸುವ ಮೂಲಕ ಅವುಗಳ ಆರೋಗ್ಯವನ್ನು ಸುಧಾರಿಸುವುದು ಮತ್ತು ಹಾಲಿನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.
  • ವೆಚ್ಚ ಕಡಿತ: ರೈತರು ಹೊರಗಿನಿಂದ ಕೊಂಡುಕೊಳ್ಳುವ ದುಬಾರಿ ಪಶು ಆಹಾರದ ಮೇಲಿನ ವೆಚ್ಚವನ್ನು ಕಡಿಮೆ ಮಾಡುವ ಮೂಲಕ, ಅವರ ಒಟ್ಟಾರೆ ಕೃಷಿ ಲಾಭವನ್ನು ಹೆಚ್ಚಿಸಲು ಈ ಯೋಜನೆ ಸಹಕಾರಿಯಾಗಿದೆ.
  • ಸ್ವಾವಲಂಬನೆ: ರೈತರು ಮೇವಿನ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗುವಂತೆ ಮಾಡುವ ಮೂಲಕ ಹೈನುಗಾರಿಕೆಯನ್ನು ಲಾಭದಾಯಕ ಉದ್ಯೋಗವನ್ನಾಗಿ ಮಾಡುವುದು ಇದರ ಉದ್ದೇಶವಾಗಿದೆ.

ವಿತರಿಸಲಾಗುವ ಮೇವಿನ ಬೀಜಗಳ ವಿವರ

  • ಈ ಯೋಜನೆಯಡಿ ಈ ಕೆಳಗಿನ ಸುಧಾರಿತ ಮೇವಿನ ಬೀಜಗಳ ಕಿಟ್‌ಗಳನ್ನು (1 ರಿಂದ 5 ಕೆಜಿ ವರೆಗೆ) ನೀಡಲಾಗುತ್ತದೆ.
  • ಆಫ್ರಿಕನ್ ಟಾಲ್ ಮೆಕ್ಕೆಜೋಳ
  • ಲುಸರ್ನ್/ಕುದುರೆ ಮಸಾಲೆ)
  • ಬರ್ಸೀಮ್
  • ಜೋಳ
  • ಓಟ್ಸ್
  • ಚೈನೀಸ್ ಕ್ಯಾಬೇಜ್ ಮತ್ತು ಕಾಂಗೋ ಸಿಗ್ನಲ್ ಹುಲ್ಲು.

ಮೀಸಲಾತಿ ಮತ್ತು ಆದ್ಯತೆ

  • ಮಹಿಳಾ ಮೀಸಲಾತಿ: ಯೋಜನೆಯ ಒಟ್ಟು ಫಲಾನುಭವಿಗಳಲ್ಲಿ ಶೇಕಡಾ 30% ರಷ್ಟು ಸ್ಥಾನಗಳನ್ನು ಮಹಿಳಾ ರೈತರಿಗಾಗಿ ಮೀಸಲಿಡಲಾಗಿದ್ದು, ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿದೆ.
  • ಪರಿಶಿಷ್ಟ ಜಾತಿ: ಸಮಾಜದ ಹಿಂದುಳಿದ ವರ್ಗಗಳ ಏಳಿಗೆಗಾಗಿ ಈ ಯೋಜನೆಯಡಿ ಪರಿಶಿಷ್ಟ ಜಾತಿಯ ರೈತರಿಗೆ ಶೇಕಡಾ 16% ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗಿದೆ.
  • ಪರಿಶಿಷ್ಟ ಪಂಗಡ: ಪರಿಶಿಷ್ಟ ಪಂಗಡಕ್ಕೆ ಸೇರಿದ ರೈತ ಫಲಾನುಭವಿಗಳಿಗಾಗಿ ಶೇಕಡಾ 7% ರಷ್ಟು ಮೀಸಲಾತಿಯನ್ನು ನಿಗದಿಪಡಿಸಲಾಗಿದೆ.
  • ಅಲ್ಪಸಂಖ್ಯಾತರು ಮತ್ತು ಇತರರು: ಮೀಸಲಾತಿ ವರ್ಗಗಳ ಜೊತೆಗೆ ಅಲ್ಪಸಂಖ್ಯಾತ ಸಮುದಾಯದ ರೈತರಿಗೂ ಸರ್ಕಾರದ ನಿಯಮಾನುಸಾರ ಯೋಜನೆಯ ಲಾಭ ಪಡೆಯಲು ಆದ್ಯತೆ ನೀಡಲಾಗುತ್ತದೆ.
  • ಒಟ್ಟಾರೆ ಗುರಿ: ಸಮಾಜದ ಎಲ್ಲಾ ವರ್ಗದ ಅರ್ಹ ರೈತರಿಗೂ ಸಮಾನವಾಗಿ ಈ ಯೋಜನೆಯ ಪ್ರಯೋಜನಗಳು ತಲುಪುವಂತೆ ನೋಡಿಕೊಳ್ಳುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ.

ಅರ್ಹತಾ ಮಾನದಂಡಗಳು ಏನು?

  • ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಜಿದಾರರು ಕಡ್ಡಾಯವಾಗಿ ಕರ್ನಾಟಕ ರಾಜ್ಯದ ಕಾಯಂ ನಿವಾಸಿಯಾಗಿರಬೇಕು.
  • ಮೇವು ಬೆಳೆಯಲು ಅನುಕೂಲವಾಗುವಂತೆ ರೈತರು ತಮ್ಮ ಹೆಸರಿನಲ್ಲಿ ಕನಿಷ್ಠ ಪ್ರಮಾಣದ ಸ್ವಂತ ಕೃಷಿ ಭೂಮಿಯನ್ನು ಹೊಂದಿರಬೇಕು.
  • ಹೈನುಗಾರಿಕೆಯನ್ನು ಉತ್ತೇಜಿಸುವ ಉದ್ದೇಶವಿರುವುದರಿಂದ, ಕನಿಷ್ಠ ಎರಡು ಜಾನುವಾರುಗಳನ್ನು (ಹಸು ಅಥವಾ ಎಮ್ಮೆ) ಸಾಕುತ್ತಿರುವ ರೈತರಿಗೆ ಈ ಯೋಜನೆಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ.
  • ಒಮ್ಮೆ ಈ ಯೋಜನೆಯಡಿ ಮೇವಿನ ಕಿಟ್ ಪಡೆದ ರೈತರು, ಸೌಲಭ್ಯ ಪಡೆದ ದಿನಾಂಕದಿಂದ ಒಂದು ವರ್ಷ ಪೂರ್ಣಗೊಂಡ ನಂತರವಷ್ಟೇ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅರ್ಹರಾಗುತ್ತಾರೆ.
  • ಅರ್ಹ ರೈತರು ತಮ್ಮ ಅರ್ಹತೆಯನ್ನು ಸಾಬೀತುಪಡಿಸಲು ಆಯಾ ಪಶುವೈದ್ಯಕೀಯ ಕಚೇರಿಗಳಲ್ಲಿ ಅಗತ್ಯ ಭೂ ದಾಖಲೆಗಳು ಮತ್ತು ಜಾನುವಾರುಗಳ ವಿವರಗಳನ್ನು ಒದಗಿಸಬೇಕಾಗುತ್ತದೆ.

ಮೇವಿನ ಕಿರು ಪೊಟ್ಣಣಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

  • ಆಸಕ್ತ ರೈತರು ತಮ್ಮ ಗ್ರಾಮಕ್ಕೆ ಅಥವಾ ತಾಲ್ಲೂಕಿಗೆ ಹತ್ತಿರವಿರುವ ಪಶು ಆಸ್ಪತ್ರೆ, ಪಶು ಚಿಕಿತ್ಸಾಲಯ ಅಥವಾ ತಾಲ್ಲೂಕು ಪಶುಸಂಗೋಪನೆ ಇಲಾಖೆಯ ಕಚೇರಿಗೆ ನೇರವಾಗಿ ಭೇಟಿ ನೀಡಬೇಕು.
  • ಕಚೇರಿಯಲ್ಲಿ ಲಭ್ಯವಿರುವ 'ಮೇವಿನ ಕಿರು ಪೊಟ್ಣಣ ವಿತರಣೆ' ಯೋಜನೆಯ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಅದರಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ಮತ್ತು ಕೃಷಿ ವಿವರಗಳನ್ನು ಭರ್ತಿ ಮಾಡಬೇಕು.
  • ಭರ್ತಿ ಮಾಡಿದ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಪಹಣಿ ಮತ್ತು ಜಾತಿ ಪ್ರಮಾಣಪತ್ರದಂತಹ ಅಗತ್ಯ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಬೇಕು.
  • ಅರ್ಜಿ ಸ್ವೀಕರಿಸಿದ ನಂತರ, ಪಶುವೈದ್ಯಕೀಯ ಅಧಿಕಾರಿಗಳು ರೈತರ ಭೂ ದಾಖಲೆಗಳನ್ನು ಮತ್ತು ಜಾನುವಾರುಗಳ ಲಭ್ಯತೆಯನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುತ್ತಾರೆ.
  • ಪರಿಶೀಲನೆ ಪ್ರಕ್ರಿಯೆ ಮುಗಿದ ನಂತರ, ಮಳೆಗಾಲ (ಖಾರಿಫ್) ಅಥವಾ ಚಳಿಗಾಲದ (ರಬಿ) ಬಿತ್ತನೆ ಹಂಗಾಮಿಗೆ ಸರಿಯಾಗಿ ಸುಧಾರಿತ ಮೇವಿನ ಬೀಜಗಳ ಕಿಟ್‌ಗಳನ್ನು ರೈತರಿಗೆ ಉಚಿತವಾಗಿ ವಿತರಿಸಲಾಗುತ್ತದೆ.



ಅಗತ್ಯ ದಾಖಲೆಗಳು

  • ಆಧಾರ್ ಕಾರ್ಡ್
  • ಜಮೀನಿನ ದಾಖಲೆಗಳು (ಪಹಣಿ)
  • ಜಾತಿ ಮತ್ತು ಆದಾಯ ಪ್ರಮಾಣಪತ್ರ (ಅನ್ವಯವಾಗುವವರಿಗೆ)
  • ರೇಷನ್ ಕಾರ್ಡ್ (ಬಿಪಿಎಲ್ ಕಾರ್ಡ್ ಇದ್ದರೆ ಅನುಕೂಲ)
  • ಬ್ಯಾಂಕ್ ಪಾಸ್ ಬುಕ್ ವಿವರಗಳು
  • ಇತ್ತೀಚಿನ ಫೋಟೋ



ಸಂಪರ್ಕ ಮಾಹಿತಿ

  • ವೆಬ್‌ಸೈಟ್: ahvs.kar.nic.in
  • ಸಹಾಯವಾಣಿ: 8277100200
  • ವಿಳಾಸ: ಪಶುಪಾಲನಾ ಭವನ, ಹೆಬ್ಬಾಳ, ಬೆಂಗಳೂರು - 560024.
]]>
Sat, 10 Jan 2026 07:29:15 +0530 shivuagrico
Gram one franchise&ಗ್ರಾಮ ಒನ್ ಕೇಂದ್ರದ ಫ್ರಾಂಚೈಸಿಗಾಗಿ ಅರ್ಜಿ ಆಹ್ವಾನ: ನಿಮ್ಮ ಹಳ್ಳಿಯಲ್ಲೇ ಸ್ವಂತ ಉದ್ಯೋಗ ಆರಂಭಿಸಲು ಸುವರ್ಣಾವಕಾಶ https://krushirushi.in/Gram-one-franchise-2381 https://krushirushi.in/Gram-one-franchise-2381 Gram one franchise-ಗ್ರಾಮ ಒನ್ ಕೇಂದ್ರದ ಫ್ರಾಂಚೈಸಿಗಾಗಿ ಅರ್ಜಿ ಆಹ್ವಾನ: ನಿಮ್ಮ ಹಳ್ಳಿಯಲ್ಲೇ ಸ್ವಂತ ಉದ್ಯೋಗ ಆರಂಭಿಸಲು ಸುವರ್ಣಾವಕಾಶ


ಕರ್ನಾಟಕ ಸರ್ಕಾರವು ಗ್ರಾಮ ಒನ್ ಕೇಂದ್ರಗಳ ಫ್ರಾಂಚೈಸಿಯನ್ನು ಆರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಇದರಿಂದ ಗ್ರಾಮೀಣ ಜನರಿಗೆ ಸರ್ಕಾರಿ ಮತ್ತು ಖಾಸಗಿ ಸೇವೆಗಳು ಒಂದೇ ಸೂರಿನಡಿ ದೊರೆಯಲಿವೆ. ಕಲಬುರಗಿ ಮತ್ತು ಮೈಸೂರು ವಿಭಾಗದ ಜಿಲ್ಲೆಗಳಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಬಹುದು. ಅರ್ಜಿ ಸಲ್ಲಿಸಲು ಜನವರಿ 15, 2026 ಕೊನೆಯ ದಿನಾಂಕವಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳು ಹಾಗೂ ಸೇವೆಗಳನ್ನು ಜನರಿಗೆ ತಲುಪಿಸುವಲ್ಲಿ ಗ್ರಾಮ ಒನ್‌ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತಿವೆ. ನೀವು ಕೂಡ ಗ್ರಾಮ ಒನ್‌ ಫ್ರಾಂಚೈಸಿಯನ್ನು ಆರಂಭಿಸಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬಹುದು. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಇ-ಆಡಳಿತ ನಿರ್ದೇಶನಾಲಯವು ಗ್ರಾಮೀಣ ಭಾಗದ ಜನರಿಗೆ ಒಂದೇ ಸೂರಿನಡಿ ಸರ್ಕಾರಿ ಮತ್ತು ಖಾಸಗಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ 'ಗ್ರಾಮ ಒನ್' ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.

 

ಗ್ರಾಮ ಒನ್ ಎಂದರೇನು?

ಗ್ರಾಮ ಒನ್ ಎಂಬುದು ಗ್ರಾಮೀಣ ಮಟ್ಟದಲ್ಲಿ ನಾಗರಿಕರಿಗೆ ಒಂದೇ ಸೂರಿನಡಿ ವಿವಿಧ ಸರ್ಕಾರಿ ಮತ್ತು ಖಾಸಗಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು 2020-21ರ ಆಯವ್ಯಯದಲ್ಲಿ ಘೋಷಿಸಿದ ಒಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಇದು ಗ್ರಾಮ ಮಟ್ಟದಲ್ಲಿ ನಾಗರಿಕ ಕೇಂದ್ರಿತ ಚಟುವಟಿಕೆಗಳಿಗೆ ಏಕ ಸಹಾಯಕ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಸರ್ಕಾರದಿಂದ ನಾಗರಿಕರಿಗೆ ಸರ್ಕಾರಿ ಸೇವೆಗಳು, ಬ್ಯಾಂಕಿಂಗ್ ಸೇವೆಗಳು ಮತ್ತು ಆರ್‌ಟಿಐ ಅರ್ಜಿಗಳೂ ಸೇರಿದಂತೆ ಸುಮಾರು 800ಕ್ಕೂ ಹೆಚ್ಚು ಸೇವೆಗಳನ್ನು ಸುಲಭವಾಗಿ ಪಡೆಯಬಹುದಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಈ ಕೇಂದ್ರಗಳು ವಾರದ ಏಳು ದಿನಗಳೂ ಸಹ ಬೆಳಿಗ್ಗೆ 8:00 ಗಂಟೆಯಿಂದ ರಾತ್ರಿ 8:00 ಗಂಟೆಯವರೆಗೆ ಸತತವಾಗಿ ಕಾರ್ಯನಿರ್ವಹಿಸುತ್ತವೆ. ಇದರಿಂದ ಗ್ರಾಮೀಣ ಜನರು ಕಚೇರಿಗಳಿಗೆ ಅಲೆಯುವ ಸಮಯ ಮತ್ತು ಹಣ ಉಳಿತಾಯವಾಗುತ್ತದೆ.

ಗ್ರಾಮ ಒನ್ ಕೇಂದ್ರದಿಂದ ಆಗುವ ಲಾಭಗಳು:

  • ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ: ಸಾರ್ವಜನಿಕರು ಸಣ್ಣಪುಟ್ಟ ಸರ್ಕಾರಿ ಕೆಲಸಗಳಿಗಾಗಿ ಅಥವಾ ದಾಖಲೆಗಳಿಗಾಗಿ ಪದೇ ಪದೇ ತಾಲ್ಲೂಕು ಮತ್ತು ಜಿಲ್ಲಾ ಕಚೇರಿಗಳಿಗೆ ಅಲೆಯುವ ಅವಶ್ಯಕತೆ ಇರುವುದಿಲ್ಲ. ಎಲ್ಲಾ ಸೇವೆಗಳು ಗ್ರಾಮ ಮಟ್ಟದಲ್ಲೇ ದೊರೆಯುತ್ತವೆ.
  • ಸಮಯ ಮತ್ತು ಹಣದ ಉಳಿತಾಯ: ನಾಗರಿಕರು ತಮ್ಮ ಹಳ್ಳಿಯಲ್ಲೇ ಸೇವೆಗಳನ್ನು ಪಡೆಯುವುದರಿಂದ ನಗರ ಪ್ರದೇಶಗಳಿಗೆ ಪ್ರಯಾಣಿಸುವ ಖರ್ಚು ಕಡಿಮೆಯಾಗುತ್ತದೆ ಮತ್ತು ಕಚೇರಿಗಳಲ್ಲಿ ಗಂಟೆಗಟ್ಟಲೆ ಕಾಯುವ ಸಮಯ ಉಳಿತಾಯವಾಗುತ್ತದೆ.
  • ಮಧ್ಯವರ್ತಿಗಳ ಹಾವಳಿ ಇಲ್ಲ: ಗ್ರಾಮ ಒನ್ ಕೇಂದ್ರಗಳಲ್ಲಿ ನೇರ ಮತ್ತು ಪಾರದರ್ಶಕ ವ್ಯವಸ್ಥೆ ಇರುವುದರಿಂದ ಸಾರ್ವಜನಿಕರು ಯಾವುದೇ ಮಧ್ಯವರ್ತಿಗಳ ಮೊರೆ ಹೋಗುವ ಅಗತ್ಯವಿಲ್ಲ, ಇದರಿಂದ ಹಣ ದುರುಪಯೋಗವಾಗುವುದು ತಪ್ಪುತ್ತದೆ.
  • ಅನುಕೂಲಕರ ಸಮಯ: ಈ ಕೇಂದ್ರಗಳು ಬೆಳಿಗ್ಗೆ 8:00 ರಿಂದ ರಾತ್ರಿ 8:00 ರವರೆಗೆ ಕಾರ್ಯನಿರ್ವಹಿಸುವುದರಿಂದ, ಕೃಷಿ ಕಾರ್ಮಿಕರು ಅಥವಾ ಉದ್ಯೋಗಸ್ಥರು ತಮ್ಮ ಕೆಲಸ ಮುಗಿದ ನಂತರ ತಮಗೆ ಅನುಕೂಲವಾದ ಸಮಯದಲ್ಲಿ ಭೇಟಿ ನೀಡಿ ಸೇವೆಗಳನ್ನು ಪಡೆಯಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಂದು?

ಗ್ರಾಮ ಒನ್‌ ಫ್ರಾಂಚೈಸಿಗೆ ಅರ್ಜಿ ಆಹ್ವಾನ

ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆಸಕ್ತಿ ಇರುವ ಅಭ್ಯರ್ಥಿಗಳು 01 ಜನವರಿ 2026 ರಿಂದಲೇ ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಫ್ರಾಂಚೈಸಿ ಪಡೆಯಲು ಅರ್ಜಿ ಸಲ್ಲಿಸಲು 15 ಜನವರಿ 2026ರ ಸಂಜೆ 6:00 ಗಂಟೆಯವರೆಗೆ ಮಾತ್ರ ಕಾಲಾವಕಾಶವಿರುತ್ತದೆ. ಈ ಅರ್ಜಿಗಳನ್ನು ಕಡ್ಡಾಯವಾಗಿ ಆನ್‌ಲೈನ್ ಮೂಲಕವೇ ಸಲ್ಲಿಸಬೇಕಾಗಿದ್ದು, ಯಾವುದೇ ರೀತಿಯ ಭೌತಿಕ ಅಥವಾ ಆಫ್‌ಲೈನ್ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ದಿನಾಂಕ ಮತ್ತು ಸಮಯದ ನಂತರ ಬರುವ ಯಾವುದೇ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಆಹ್ವಾನಿಸಲಾದ ಜಿಲ್ಲೆಗಳು

ಪ್ರಸ್ತುತ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಕೇವಲ ಕಲಬುರಗಿ ಮತ್ತು ಮೈಸೂರು ವಿಭಾಗದ ಜಿಲ್ಲೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ ಮೈಸೂರು ವಿಭಾಗದ ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಹಾಗೂ ಕೊಡಗು ಜಿಲ್ಲೆಗಳು ಸೇರಿದ್ದರೆ, ಕಲಬುರಗಿ ವಿಭಾಗದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಆಸಕ್ತ ಅಭ್ಯರ್ಥಿಗಳು ಮಾತ್ರ ಈ ಹಂತದಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ಅರ್ಹತೆ ಏನು?

ಅರ್ಜಿದಾರರು ಕನಿಷ್ಠ ಪಿಯುಸಿ (PUC II), ಡಿಪ್ಲೊಮಾ, ಐಟಿಐ ಅಥವಾ ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಇದರೊಂದಿಗೆ ಕಂಪ್ಯೂಟರ್ ನಿರ್ವಹಣೆಯ ಬಗ್ಗೆ ಕಡ್ಡಾಯವಾಗಿ ಜ್ಞಾನ ಹೊಂದಿರಬೇಕಾದುದು ಅವಶ್ಯಕ

ಬಂಡವಾಳ ಹೂಡಿಕೆ ಎಷ್ಟು?

ಈ ಕೇಂದ್ರವನ್ನು ಆರಂಭಿಸಲು ಅಭ್ಯರ್ಥಿಯು ಸುಮಾರು 1 ರಿಂದ 2 ಲಕ್ಷ ರೂಪಾಯಿಗಳ ಬಂಡವಾಳ ಹೂಡಿಕೆ ಮಾಡುವ ಸಾಮರ್ಥ್ಯ ಹೊಂದಿರಬೇಕು. ಅಭ್ಯರ್ಥಿಯು ಕಡ್ಡಾಯವಾಗಿ ಪೊಲೀಸ್ ತಪಾಸಣಾ ಪ್ರಮಾಣ ಪತ್ರವನ್ನು ಒದಗಿಸಬೇಕು. ಅರ್ಜಿಯ ಜೊತೆಗೆ 100 ರೂಪಾಯಿಗಳ ಮರುಪಾವತಿಸಲಾಗದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಒಂದು ವೇಳೆ ನೀವು ಈ ಯೋಜನೆಗೆ ಆಯ್ಕೆಯಾದರೆ, 5000 ರೂಪಾಯಿಗಳ ಮರುಪಾವತಿಸಬಹುದಾದ ಭದ್ರತಾ ಠೇವಣಿಯನ್ನು ಪಾವತಿಸಬೇಕು.

ಗ್ರಾಮ ಒನ್_ ಕೇಂದ್ರಗಳ ಸೇವೆಗಳ ವಿವರ

ಮೂಲ ಸೌಕರ್ಯದ ಅವಶ್ಯಕತೆಗಳೇನು

  • ಗ್ರಾಮ ಒನ್ ಕೇಂದ್ರವು ಕನಿಷ್ಠ 100 ಚದರ ಅಡಿ ವಿಸ್ತೀರ್ಣವಿರುವ ಒಂದು ಪ್ರತ್ಯೇಕ ಕೊಠಡಿಯನ್ನು ಹೊಂದಿರಬೇಕು.
  • ಈ ಕೇಂದ್ರವು ಗ್ರಾಮದ ಪ್ರಮುಖ ಸ್ಥಳದಲ್ಲಿದ್ದು, ಸಾರ್ವಜನಿಕರು ಸುಲಭವಾಗಿ ಭೇಟಿ ನೀಡುವಂತಿರಬೇಕು.
  • ಕೊಠಡಿಯ ನೆಲಹಾಸು ಟೈಲ್ಸ್ ಅಥವಾ ಗ್ರಾನೈಟ್‌ನಿಂದ ಕೂಡಿರಬೇಕು ಹಾಗೂ ಉತ್ತಮ ಗಾಳಿ ಮತ್ತು ಬೆಳಕಿನ ವ್ಯವಸ್ಥೆಯನ್ನು ಹೊಂದಿರಬೇಕು.
  • ಕೇಂದ್ರಕ್ಕೆ ಬರುವ ಗ್ರಾಹಕರಿಗಾಗಿ ಕನಿಷ್ಠ 4 ಕುರ್ಚಿಗಳ ಆಸನ ವ್ಯವಸ್ಥೆ ಇರಬೇಕು.
  • ಸುರಕ್ಷತೆಯ ದೃಷ್ಟಿಯಿಂದ ಸಿ.ಸಿ.ಟಿ.ವಿ ಕ್ಯಾಮೆರಾ ಮತ್ತು ಮಾಹಿತಿ ಪ್ರದರ್ಶನಕ್ಕಾಗಿ ಎಲ್.ಸಿ.ಡಿ ಟಿವಿ ಅಳವಡಿಸಿರುವುದು ಕಡ್ಡಾಯ.


ತಾಂತ್ರಿಕ ಸಾಮಗ್ರಿಗಳ ಅವಶ್ಯಕತೆಗಳು

  • ಕೇಂದ್ರದಲ್ಲಿ ಕನಿಷ್ಠ i3 ಸಂರಚನೆಯ ಡೆಸ್ಕ್‍ಟಾಪ್ ಅಥವಾ ಲ್ಯಾಪ್‍ಟಾಪ್ ಇರಬೇಕು.
  • ಸ್ಕ್ಯಾನ್ ಮತ್ತು ಪ್ರಿಂಟ್ ಮಾಡಲು ಅನುಕೂಲವಾಗುವ ಮಲ್ಟಿ ಫಂಕ್ಷನ್ ಪ್ರಿಂಟರ್ ಹಾಗೂ ಬಯೋಮೆಟ್ರಿಕ್ ಸ್ಕ್ಯಾನರ್ ಉಪಕರಣಗಳು ಇರಬೇಕು.
  • ಆನ್‌ಲೈನ್ ಸೇವೆಗಳಿಗಾಗಿ ವೆಬ್ ಕ್ಯಾಮರಾ ಮತ್ತು ವೈ-ಫೈ ರಿಸೀವರ್ ವ್ಯವಸ್ಥೆ ಹೊಂದಿರಬೇಕು.
  • ಇಂಟರ್ನೆಟ್ ವ್ಯತ್ಯಯವಾಗದಂತೆ ತಡೆಯಲು ಕನಿಷ್ಠ ಇಬ್ಬರು ಸೇವೆ ಒದಗಿಸುವವರಿಂದ (ISPs) ಸ್ಥಿರವಾದ ಅಂತರ್ಜಾಲ ಸಂಪರ್ಕ ಪಡೆದಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲು ಗ್ರಾಮ ಒನ್ ಅಧಿಕೃತ ಪೋರ್ಟಲ್ kal-mys.gramaone.karnataka.gov.in/ ಗೆ ಭೇಟಿ ನೀಡಿ.
  • ವೆಬ್‌ಸೈಟ್‌ನಲ್ಲಿ 'New Registration' ಅಥವಾ 'Apply for Franchise' ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ ಬಳಸಿ ಪ್ರಾಥಮಿಕ ನೋಂದಣಿ ಮಾಡಿಕೊಳ್ಳಿ.
  • ನಿಮ್ಮ ವೈಯಕ್ತಿಕ ವಿವರಗಳು, ಶೈಕ್ಷಣಿಕ ಅರ್ಹತೆ (ಪಿಯುಸಿ/ಪದವಿ), ಮತ್ತು ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿರುವ ಗ್ರಾಮ ಹಾಗೂ ಜಿಲ್ಲೆಯ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು (ಗುರುತಿನ ಚೀಟಿ, ಶೈಕ್ಷಣಿಕ ದಾಖಲೆಗಳು, ಸ್ಥಳದ ಫೋಟೋಗಳು ಮತ್ತು ಪೊಲೀಸ್ ತಪಾಸಣಾ ಪ್ರಮಾಣ ಪತ್ರ) ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
  • ರೂ. 100 ಅರ್ಜಿ ಶುಲ್ಕವನ್ನು ಆನ್‌ಲೈನ್ ಪೇಮೆಂಟ್ ಗೇಟ್‌ವೇ (UPI, Net Banking ಅಥವಾ Card) ಮೂಲಕ ಪಾವತಿಸಿ. ಯಾವುದೇ ಕಾರಣಕ್ಕೂ ನಗದು ಪಾವತಿ ಮಾಡಬೇಡಿ.
  • ಎಲ್ಲಾ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ 'Submit' ಬಟನ್ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಂತರ ಬರುವ 'ಅರ್ಜಿ ಉಲ್ಲೇಖ ಸಂಖ್ಯೆ' ಅನ್ನು ಮುಂದಿನ ಉಲ್ಲೇಖಕ್ಕಾಗಿ ಉಳಿಸಿಕೊಳ್ಳಿ.


  • ಪ್ರಮುಖ ಸೂಚನೆ

    ಸಾರ್ವಜನಿಕರಿಗೆ ಪ್ರಮುಖ ಸೂಚನೆಯೆಂದರೆ, ಗ್ರಾಮ ಒನ್ ಕೇಂದ್ರದ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ನಗದು ಹಣದ ಪಾವತಿಯನ್ನು ಮಾಡಬಾರದು. ಬಿಎಲ್‌ಎಸ್ ಗ್ರೂಪ್ ತನ್ನ ಯಾವುದೇ ಉದ್ಯೋಗಿ ಅಥವಾ ಪ್ರತಿನಿಧಿಗಳಿಗೆ ನಗದು ಸ್ವೀಕರಿಸಲು ಅಧಿಕಾರ ನೀಡಿರುವುದಿಲ್ಲ ಮತ್ತು ಎಲ್ಲಾ ಅಧಿಕೃತ ಪಾವತಿಗಳನ್ನು ಕೇವಲ ಆನ್‌ಲೈನ್ ಪೇಮೆಂಟ್ ಗೇಟ್‌ವೇ (ನೆಟ್ ಬ್ಯಾಂಕಿಂಗ್/ಯುಪಿಐ/ಕಾರ್ಡ್‌ಗಳು) ಮೂಲಕವೇ ಮಾಡಬೇಕಾಗುತ್ತದೆ. ಒಂದು ವೇಳೆ ನೀವು ಯಾರಿಗಾದರೂ ನಗದು ನೀಡಿದ್ದಲ್ಲಿ ಕಂಪನಿಯು ಅದರ ಜವಾಬ್ದಾರಿಯನ್ನು ಹೊರುವುದಿಲ್ಲ. ಯಾರಾದರೂ ಹಣಕ್ಕಾಗಿ ಬೇಡಿಕೆ ಇಟ್ಟಲ್ಲಿ ತಕ್ಷಣವೇ ಸಾಕ್ಷ್ಯದೊಂದಿಗೆ [email protected]ಇಮೇಲ್ ವಿಳಾಸಕ್ಕೆ ಅಥವಾ +91-9148712473/ +91-080 22221934 ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು ಅಥವಾ ಬೆಂಗಳೂರಿನ ಇನ್‌ಫಾಂಟ್ರಿ ರಸ್ತೆಯಲ್ಲಿರುವ ಅವರ ಕಚೇರಿಯನ್ನು ಸಂಪರ್ಕಿಸಬಹುದು.


    ಸಂಪರ್ಕ ಮಾಹಿತಿ

    • ದೂರವಾಣಿ ಸಂಖ್ಯೆ: 91487 12473
    • ಇ-ಮೇಲ್: [email protected]

]]>
Fri, 09 Jan 2026 07:52:45 +0530 shivuagrico
Agriculture department subsidy schemes 2026ನೇ ಸಾಲಿನ ಕೃಷಿ ಇಲಾಖೆಯ ಸಬ್ಸಿಡಿ ಯೋಜನೆಗಳ ಪಟ್ಟಿ https://krushirushi.in/Agriculture-department-subsidy-schemes-2026 https://krushirushi.in/Agriculture-department-subsidy-schemes-2026 Agriculture department subsidy schemes 2026ನೇ ಸಾಲಿನ ಕೃಷಿ ಇಲಾಖೆಯ ಸಬ್ಸಿಡಿ ಯೋಜನೆಗಳ ಪಟ್ಟಿ

ಕೃಷಿ ಇಲಾಖೆಯ ಯೋಜನೆಗಳು ರೈತರಿಗೆ ಕೃಷಿ ಯಂತ್ರೋಪಕರಣ, ಬೆಳೆ ವಿಮೆ, ನೀರಾವರಿ, ಮಣ್ಣು ಪರೀಕ್ಷೆ, ಆದಾಯ ಬೆಂಬಲ ಮತ್ತು ಮಾರುಕಟ್ಟೆ ಸಂಪರ್ಕದಂತಹ ವಿವಿಧ ಸೌಲಭ್ಯಗಳನ್ನು ನೀಡುತ್ತವೆ, ಕೃಷಿ ಇಲಾಖೆಯಿಂದ ಸಿಗುವ 21 ಯೋಜನೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ಕೃಷಿ ಇಲಾಖೆ ವತಿಯಿಂದ ಕೈಗೊಳ್ಳುತ್ತಿರುವ ಫಲಾನುಭವಿ ಆಧಾರಿತ ಯೋಜನೆಗಳು, ಫಲಾನುಭವಿಗಳ ಆಯ್ಕೆಗೆ ಇರುವ ಮಾನದಂಡಗಳ ವಿವರ

1. ಬೀಜಗಳ ಪೂರೈಕೆ: ಕೃಷಿ ಇಲಾಖೆಯ ಬೀಜಗಳ ಪೂರೈಕೆ ಮತ್ತು ಇತರೆ ಹೂಡುವಳಿ

ಯೋಜನೆಯಡಿ ರಾಜ್ಯದ ಎಲ್ಲಾ ವರ್ಗದ ರೈತರಿಗೆ ವಿವಿಧ ಕೃಷಿ ಬೆಳೆಗಳ (ಭತ್ತ, ರಾಗಿ, ಜೋಳ, ಮುಸುಕಿನ ಜೋಳ, ಸಜ್ಜೆ, ತೊಗರಿ, ಕಡಲೆ, ಹೆಸರು, ಉದ್ದು, ಅಲಸಂದೆ, ನೆಲಗಡಲೆ, ಸೂರ್ಯಕಾಂತಿ, ಸೋಯಾ ಅವರೆ, ಹತ್ತಿ ಇತ್ಯಾದಿ) ಪ್ರಮಾಣಿತ/ ನಿಜ ಚೀಟಿ ಬಿತ್ತನೆ ಬೀಜಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ. 50 ಹಾಗೂ ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಶೇ.75 ರ ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ. ಒಟ್ಟಾರೆ ಗರಿಷ್ಟ 2.00 ಹೆಕ್ಟೇರ್ ಅಥವಾ ಅವರ ವಾಸ್ತವಿಕ ಹಿಡುವಳಿ (Actual holding) ಯಾವುದು ಕಡಿಮೆಯೋ ಆ ವಿಸ್ತೀರ್ಣಕ್ಕೆ ಮಾತ್ರ ರಿಯಾಯಿತಿಯಲ್ಲಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ಬಿತ್ತನೆ ಬೀಜ ವಿತರಣೆಯಲ್ಲಿ ರೈತರ ಪಹಣಿಯಲ್ಲಿನ ವಿವರಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಪರಿಶಿಷ್ಟ ವರ್ಗ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ರೈತರು ಜಾತಿ ಪ್ರಮಾಣ ಪತ್ರವನ್ನು ជជ໖. ผู้ส่ง Farmer Registration & Unified Beneficiary Information System - FRUITS , Farmers Identification number(FID) ಪಡೆದಿರಬೇಕು.

2. ಸಸ್ಯ ಸಂರಕ್ಷಣೆ: ಶೇ.50ರ ಸಹಾಯಧನದಡಿ ಪೀಡೆನಾಶಕ/ ಜೈವಿಕ ಪೀಡೆನಾಶಕ ಹಾಗೂ ಜೈವಿಕ ನಿಯಂತ್ರಣಕಾರಕಗಳ ವಿತರಣೆ, ಬೀಜೋಪಚಾರ ಆಂದೋಲನ ಹಾಗೂ ಸುರಕ್ಷಿತ ಕೀಟನಾಶಕಗಳ ಬಳಕೆ ಬಗ್ಗೆ ತರಬೇತಿಗಾಗಿ ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ. ರೈತರು Farmer Registration & Unified Beneficiary Information System FRUITS Fe ನಲ್ಲಿ ನೋಂದಣಿಯಾಗಿ Farmers Identification number(FID) ಪಡೆದಿರಬೇಕು.

3. ಕೃಷಿ ಯಾಂತ್ರೀಕರಣ & ಕೃಷಿ ಸಂಸ್ಕರಣೆ:

ಕೃಷಿ ಯಾಂತ್ರೀಕರಣ: ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದಕ್ಕೆ ಅನುವು ಮಾಡಿಕೊಡಲು ಹಾಗೂ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ಈ ಯೋಜನೆಯಡಿ ಕೃಷಿ ಯಂತ್ರೋಪಕರಣಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ.50 ಹಾಗೂ ಪ.ಜಾ./ಪ.ಪಂ. ರೈತರಿಗೆ ಶೇ.90 ರಂತೆ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.1.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತದೆ ಹಾಗೂ 45 ಪಿ.ಟಿ.ಒ ಹೆಚ್.ಪಿ ವರೆಗಿನ ಟ್ರಾಕ್ಟರ್ ಗಳಿಗೆ ಸಾಮಾನ್ಯ ವರ್ಗದ ರೈತರಿಗೆ ರೂ.0.75 ಲಕ್ಷ ಹಾಗೂ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ರೈತರಿಗೆ ಶೇ.90 ರ ಗರಿಷ್ಠ ರೂ.3.00 ಲಕ್ಷ ಸಹಾಯಧನ ನೀಡಲಾಗುತ್ತಿದೆ.

ಕೃಷಿ ಸಂಸ್ಕರಣೆ: ಈ ಯೋಜನೆಯಡಿ ಕೃಷಿ ಸಂಸ್ಕರಣಾ ಘಟಕಗಳು, ಟಾರ್ಪಾಲಿನ್ ಮತ್ತು ಸಣ್ಣ ಯಂತ್ರಚಾಲಿತ ಎಣ್ಣೆಗಾಣ ಘಟಕಗಳನ್ನು ಸಹಾಯಧನದಡಿ ರೈತರಿಗೆ ವಿತರಿಸಲಾಗುತ್ತಿದೆ. ಸದರಿ ಯೋಜನೆಯಡಿ ಕೃಷಿ ಸಂಸ್ಕರಣಾ ಘಟಕಗಳು ಮತ್ತು ಟಾರ್ಪಾಲಿನ್ ಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ.50ರಷ್ಟು ಮತ್ತು ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಶೇ.90ರಷ್ಟು ಸಹಾಯಧನದಡಿ ನೀಡಲಾಗುವುದು. ಸಣ್ಣ ಯಂತ್ರಚಾಲಿತ ಎಣ್ಣೆಗಾಣ ಘಟಕಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ.75 ಹಾಗೂ ಪ.ಜಾ./ಪ.ಪಂ., ರೈತರಿಗೆ ಶೇ.90 ರಂತೆ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.1.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತಿದೆ.

Farmer Registration and Unified Beneficiary Information System FRUITS F Farmers Identification number (FID) ಪಡೆಯಬೇಕು. ರೈತರು ನಿಗದಿತ ಅರ್ಜಿ ನಮೂನೆಯಲ್ಲಿ ಆ‌ರ್.ಟಿ.ಸಿ. ಯೊಂದಿಗೆ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬೇಕು ಹಾಗೂ ಕೆ-ಕಿಸಾನ್ ತಂತ್ರಾಂಶದಲ್ಲಿ ಅರ್ಜಿಯನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ. ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ರೈತರಿಗೆ ಜೇಷ್ಠತೆ ಹಾಗೂ ಅನುದಾನ ಲಭ್ಯತೆಯ ಆಧಾರದ ಮೇರೆಗೆ ಮಾರ್ಗಸೂಚಿ ಅನ್ವಯ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ಒದಗಿಸಲಾಗುತ್ತಿದೆ. ರಾಜ್ಯದ ಎಲ್ಲಾ ರೈತರಿಗೂ ಯಂತ್ರೋಪಕರಣ/ಕೃಷಿ ಸಂಸ್ಕರಣಾ ಘಟಕಗಳ ಯೋಜನೆಯ ಸೌಲಭ್ಯ ನೀಡುವ ದೃಷ್ಟಿಯಿಂದ, ಒಮ್ಮೆ ಕೃಷಿ ಯಂತ್ರೋಪಕರಣ/ಕೃಷಿ ಸಂಸ್ಕರಣಾ ಘಟಕಗಳ ಸೌಲಭ್ಯ ಪಡೆದ ರೈತರು 7 ವರ್ಷಗಳ ನಂತರ ಮತ್ತು ಕೃಷಿ ಸಂಸ್ಕರಣಾ ಕಾರ್ಯಕ್ರಮದಡಿ ಟಾರ್ಪಲಿನ್ ಸೌಲಭ್ಯ ಪಡೆದ ರೈತರು 3 ವರ್ಷಗಳ ನಂತರ ಮತ್ತೆ ಸದರಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

4. ರೈತ ಸಿರಿ & ಸಾವಯವ ಕೃಷಿ: ಸಾವಯವ ಕೃಷಿ ಅಳವಡಿಕೆ ಮತ್ತು ದೃಢೀಕರಣ

ಕಾರ್ಯಕ್ರಮದಡಿ ರಾಜ್ಯದ ಸಾವಯವ ಪ್ರಮಾಣೀಕೃತ ಪ್ರದೇಶವನ್ನು ವಿಸ್ತರಿಸುವ ನಿಟ್ಟಿನಲ್ಲಿ ಆಸಕ್ತ ಗುಂಪು ಮತ್ತು ವ್ಯಕ್ತಿಗತ ಪ್ರಸ್ತಾವನೆಗಳ ಪ್ರಮಾಣೀಕರಣಕ್ಕಾಗಿ ಅನುದಾನ ಬಳಕೆ ಮಾಡಲಾಗುತ್ತದೆ.

ರೈತ ಸಿರಿ ಕಾರ್ಯಕ್ರಮದಡಿ ಸಿರಿಧಾನ್ಯಗಳ ಉತ್ಪಾದನೆಯನ್ನು ಪ್ರೋತ್ಸಾಹಿಸಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ಸಿರಿಧಾನ್ಯಗಳಾದ ನವಣೆ, ಹಾರಕ, ಕೊರಲೆ, ಸಾಮೆ, ಊದಲು, ಬರಗು ಬೆಳೆಗಳನ್ನು ಬೆಳೆದ ಎಲ್ಲಾ ವರ್ಗದ ರೈತರಿಗೆ ಪ್ರತಿ ಹೆಕ್ಟೇರಿಗೆ ರೂ.10000/-ದಂತೆ ಗರಿಷ್ಠ ಎರಡು ಹಕ್ಕೇರುಗಳಿಗೆ ಬೆಳೆ ಸಮೀಕ್ಷೆ ಆಧಾರದಂತೆ ಪ್ರೋತ್ಸಾಹಧನವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುವುದು ಹಾಗೂ ಸಾವಯವ ಮತ್ತು ಸಿರಿಧಾನ್ಯಗಳ ಉತ್ತೇಜನ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.

5. ಸಾವಯವ ಇಂಗಾಲ ಅಭಿಯಾನ: ರಾಜ್ಯದ ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲದ

ಪ್ರಮಾಣವನ್ನು ಹೆಚ್ಚಿಸಲು, ದ್ವಿದಳಧಾನ್ಯಗಳ ವಿಸ್ತೀರ್ಣ ಮತ್ತು ಉತ್ಪಾದನೆ ಹೆಚ್ಚಿಸುವ ಸಲುವಾಗಿ ಶೇ. 75ರ ರಿಯಾಯಿತಿ ದರದಲ್ಲಿ ಹಸಿರೆಲೆ ಗೊಬ್ಬರ ಬಿತ್ತನೆ ಬೀಜಗಳ ವಿತರಣೆ ಮಾಡಲಾಗುವುದು ಹಾಗೂ ಹಸಿರೆಲೆ ಗೊಬ್ಬರ ಬೀಜ ಮತ್ತು ಸಾವಯವ ಗೊಬ್ಬರಗಳ ಬಳಕೆಯಿಂದ ಸಾವಯವ ಇಂಗಾಲ ಹೆಚ್ಚಿಸುವ ಕುರಿತು ಪ್ರಾತ್ಯಕ್ಷಿಕೆಗಳನ್ನು (ಪ್ರತಿ ಪ್ರಾತ್ಯಕ್ಷಿಕೆಗೆ ರೂ. 2500/-) ಆಯೋಜಿಸಲಾಗುತ್ತಿದೆ. ರೈತರು Farmer Registration & Unified Beneficiary Farmers Identification Information System - FRUITS number(FID) ಪಡೆದಿರಬೇಕು.

6. ಹೊಸ ಬೆಳೆ ವಿಮಾ ಯೋಜನೆ: ಈ ಯೋಜನೆಯಡಿ ಪ್ರಕೃತಿ ವಿಕೋಪಗಳು, ಕೀಟಗಳು ಮತ್ತು

ರೋಗಗಳಿಂದಾಗಿ ಯಾವುದೇ ಅಧಿಸೂಚಿತ ಬೆಳೆ ವಿಫಲವಾದ ಪಕ್ಷದಲ್ಲಿ ರೈತರಿಗೆ ವಿಮಾ ರಕ್ಷಣೆ ಮತ್ತು ಹಣಕಾಸು ಬೆಂಬಲ ನೀಡಲಾಗುವುದು. ರೈತರಿಗೆ ನೀಡುವ ವಿಮಾ ಕಂತಿನ ರಿಯಾಯಿತಿಯಲ್ಲಿ ರಾಜ್ಯ ಸರ್ಕಾರದ ಪಾಲನ್ನು ನೀಡಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಅನುವು ಮಾಡಲಾಗುತ್ತಿದೆ.

ಈ ಯೋಜನೆಯಡಿ ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಾಗೂ ಇತರೆ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಪ್ರಥಮವಾಗಿ ಅಧಿಸೂಚಿಸಲಾಗುತ್ತದೆ. ಅಂತಿಮ ದಿನಾಂಕದೊಳಗೆ ರೈತರಿಂದ ಪ್ರೀಮಿಯಂ ಪಡೆದು ಬ್ಯಾಂಕ್ / ಸಹಕಾರ ಸಂಸ್ಥೆ / ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಬೆಳೆ ವಿಮೆ ನೋಂದಣಿ ಕಾರ್ಯ ಕೈಗೊಳ್ಳಲಾಗುತ್ತದೆ ದಾಖಲೆಗಳನ್ನು ಪರಿಶೀಲಿಸಿ ಅರ್ಹ ರೈತರ ಪ್ರಸ್ತಾವನೆಗಳನ್ನು ಸಂಬಂಧಿಸಿದ ವಿಮಾ ಸಂಸ್ಥೆಗಳಿಗೆ ಅಂಗೀಕರಿಸಲು ರವಾನಿಸಲಾಗುತ್ತದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯು ಕ್ಷೇತ್ರಾಧಾರಿತ ಹಾಗೂ ಇಳುವರಿ ಆಧಾರಿತ ಯೋಜನೆಯಾಗಿದ್ದು, ಮಾರ್ಗಸೂಚಿಯನುಸಾರ ಹೋಬಳಿ / ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯವರು ನೀಡುವ ಬೆಳೆ ಕಟಾವು ಪ್ರಯೋಗಗಳಿಂದ ಬಂದಂತಹ ವಾಸ್ತವಿಕ ಇಳುವರಿ ಮಾಹಿತಿಯು ನಿಗದಿಪಡಿಸಲಾದ ಪ್ರಾರಂಭಿಕ ಇಳುವರಿಗಿಂತ ಕಡಿಮೆ ಇದ್ದರೆ, ಇಳುವರಿಯ ಕೊರತೆಗನುಗುಣವಾಗಿ ಹೋಬಳಿ/ ಗ್ರಾಮ ಪಂಚಾಯಿತಿಯಲ್ಲಿ ಬೆಳೆ ವಿಮೆ ಮಾಡಿಸಿದ ಎಲ್ಲಾ ರೈತರು ಬೆಳೆ ವಿಮಾ ನಷ್ಟ ಪರಿಹಾರ ಪಡೆಯಲು ಅರ್ಹರಾಗುತ್ತಾರೆ. ಅರ್ಹ ರೈತರಿಗೆ ವಿಮೆ ಪರಿಹಾರ ಮೊತ್ತವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವಿಮಾ ಸಂಸ್ಥೆಯವರು ವರ್ಗಾಯಿಸುತ್ತಾರೆ.

7. ಬೆಳೆ ಸಮೀಕ್ಷೆ: ಪೂರ್ವ ಮುಂಗಾರು, ಮುಂಗಾರು, ಹಿಂಗಾರು ಮತ್ತು ಬೇಸಿಗೆ

ಹಂಗಾಮುಗಳಲ್ಲಿ ಬೆಳೆ ಸಮೀಕ್ಷೆ ಕೈಗೊಂಡ ಖಾಸಗಿ ನಿವಾಸಿಗಳಿಗೆ ಕೇಂದ್ರೀಕೃತ DBT k2 ಮೂಲಕ ಆಧಾ‌ರ್ ಆಧಾರಿತ ನೇರ ಗೌರವಧನ ಪಾವತಿ, ಮಾಸ್ಟರ್ ತರಬೇತುದಾರರು ಹಾಗೂ ಜಿಲ್ಲಾ ತಾಂತ್ರಿಕ ಸಲಹೆಗಾರರ ಗೌರವಧನ, ಬೆಳೆ ಸಮೀಕ್ಷೆ ಕುರಿತು ತರಬೇತಿ, ಕಾರ್ಯಾಗಾರ ಆಯೋಜನೆ, ವಿವಿಧ ಮಾಧ್ಯಮಗಳ ಮೂಲಕ ಜಾಹೀರಾತು, ಮುದ್ರಣ, ಸಿ.ಡಿ. ದಾಖಲಾತಿ, ವಿದ್ಯುನ್ಮಾನ ಮತ್ತು ವಿವಿಧ ಮಾಧ್ಯಮಗಳ ಮುಖಾಂತರ ಪ್ರಚಾರಕ್ಕಾಗಿ ತಗಲುವ ವೆಚ್ಚ, ಹೆಲ್ಸ್ ಡೆಸ್ಕ್ ಸಿಬ್ಬಂದಿ ವೇತನ ಹಾಗೂ ತಂತ್ರಾಂಶ ನಿರ್ವಹಣೆ ವೆಚ್ಚ, ಶೇ. 1ರಷ್ಟು ದತ್ತಾಂಶದ ಪರಿಶೀಲನೆ ಕೈಗೊಳ್ಳುವ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ ಸಿಬ್ಬಂದಿಗಳಿಗೆ ಗೌರವಧನ, ಬೆಳೆ ಸಮೀಕ್ಷೆ ಕಾರ್ಯತಂಡ ನಿರ್ವಹಣೆ, ಇತರೆ ಕಛೇರಿ ಮತ್ತು ಆಡಳಿತಾತ್ಮಕ ವೆಚ್ಚಕ್ಕಾಗಿ ಉಪಯೋಗಿಸಲಾಗುತ್ತದೆ. ಪಹಣಿ ಹೊಂದಿರುವ ಎಲ್ಲಾ ಹಿಡುವಳಿದಾರರು ಅರ್ಹರಿರುತ್ತಾರೆ.

8. ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ: ಎಸ್.ಎಸ್.ಎಲ್.ಸಿ/ 10ನೇ ತರಗತಿಯನ್ನು

ಪೂರೈಸಿರುವ ಹಾಗೂ ರಾಜ್ಯದ ಯಾವುದೇ ಭಾಗದಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆ/ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಗಳವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ರೈತರ ಹಾಗೂ ಪ್ರೌಢಶಾಲಾ ಶಿಕ್ಷಣ ಪಡೆಯುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳಿಗೆ ಹಾಗೂ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ.

ಸದರಿ ಯೋಜನೆಯಡಿ:-

8, 9 ಮತ್ತು 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳು ಮತ್ತು ಎಸ್.ಎಸ್.ಎಲ್.ಸಿ /10ನೇ ತರಗತಿಯನ್ನು ಪೂರೈಸಿರುವ ಹಾಗೂ ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣಸಂಸ್ಥೆ/ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್-ಗಳವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ರೈತರ ಮಕ್ಕಳು ಈ ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುತ್ತಾರೆ.

ರೈತ ಕುಟುಂಬದ ಎಲ್ಲಾ ಮಕ್ಕಳು 'ಮುಖ್ಯಮಂತ್ರಿ ರೈತ ವಿದ್ಯಾನಿಧಿ' ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುತ್ತಾರೆ. ಸದರಿ ಉದ್ದೇಶಕ್ಕೆ ರೈತ ಎಂದರೆ ರಾಜ್ಯದ ಯಾವುದೇ ಭಾಗದಲ್ಲಿ ಉಳುಮೆ ಮಾಡುವಂತಹ/ ಕೃಷಿ ಮಾಡುವಂತಹ ಜಮೀನನ್ನು ತನ್ನ ಹೆಸರಿನಲ್ಲಿ ಹೊಂದಿರುವಂತಹ ವ್ಯಕ್ತಿ (ಕೃಷಿ ಇಲಾಖೆಯ FRUITS ತಂತ್ರಾಂಶದಲ್ಲಿ ಭೂಸಹಿತ FID ಸಂಖ್ಯೆ ಹೊಂದಿರಬೇಕು). ಕೃಷಿ ಕಾರ್ಮಿಕರು ಎಂದರೆ ಕೃಷಿ ಇಲಾಖೆಯ FRUITS ತಂತ್ರಾಂಶದಲ್ಲಿ ಭೂರಹಿತ FID ಸಂಖ್ಯೆ ಹೊಂದಿದ್ದು MGNREGA ಉದ್ಯೋಗ ಚೀಟಿ ಹೊಂದಿರಬೇಕು. ರೈತ ಕುಟುಂಬ ಎಂದರೆ ರಾಜ್ಯದ ಇ-ಆಡಳಿತ ಇಲಾಖೆಯು ನಿರ್ವಹಿಸುತ್ತಿರುವ "ಕುಟುಂಬ' ತಂತ್ರಂಶದ ದತ್ತಾಂಶದಲ್ಲಿ ದಾಖಲಾಗಿರುವ ಸದಸ್ಯರು.

ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಇತರೆ ಯಾವುದೇ ಇಲಾಖೆಯು ನೀಡುವ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು 'ಮುಖ್ಯಮಂತ್ರಿ ರೈತ ವಿದ್ಯಾನಿಧಿ' ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುವುದಿಲ್ಲ.

9. ಕೃಷಿ ಪ್ರಶಸ್ತಿ ಮತ್ತು ಕೃಷಿ ಪಂಡಿತ ಪ್ರಶಸ್ತಿ:

ಹಿಂದೆ ಕೃಷಿ ಪಂಡಿತ ಪ್ರಶಸ್ತಿ: ಕೃಷಿ ಕ್ಷೇತ್ರದಲ್ಲಿ ವಿನೂತನ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗಾಗಿ ಕೊಡುಗೆ ನೀಡುತ್ತಿರುವ ರೈತ ಮತ್ತು ರೈತ ಮಹಿಳೆಯರಿಗೆ ಕೃಷಿ ಪಂಡಿತ ಪ್ರಶಸ್ತಿ ನೀಡಲಾಗುತ್ತಿದೆ. ಪಂಡಿತ ಪ್ರಶಸ್ತಿ (ಪ್ರಥಮ/ದ್ವಿತೀಯ/ತೃತೀಯ/ಉದಯೋನ್ಮುಖ) ಪಡೆದವರು ಹೊರತುಪಡಿಸಿ ಉಳಿದೆಲ್ಲಾ ರೈತ ಮತ್ತು ರೈತ ಮಹಿಳೆಯರು ಕೃಷಿ ಪಂಡಿತ ಪ್ರಶಸ್ತಿಗೆ ಸ್ಪರ್ಧಿಸಬಹುದಾಗಿರುತ್ತದೆ. ಕೃಷಿ

ಕೃಷಿ ಪ್ರಶಸ್ತಿ : ಕೃಷಿ ಕ್ಷೇತ್ರದಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು ರೈತರಲ್ಲಿ ಆರೋಗ್ಯಕರ ಸ್ಪರ್ಧಾ ಮನೋಭಾವನೆಯನ್ನು ಉಂಟು ಮಾಡಿ ಅತಿ ಹೆಚ್ಚು ಇಳುವರಿ ಪಡೆಯುವ ರೈತ ಮತ್ತು ರೈತ ಮಹಿಳೆಯರಿಗೆ ಕೃಷಿ ಪ್ರಶಸಿಯನ್ನು ನೀಡಲಾಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಬೆಳೆ ಸ್ಪರ್ಧೆಯಡಿ ವಿಜೇತರಾದವರನ್ನು ಹೊರತುಪಡಿಸಿ ಉಳಿದೆಲ್ಲಾ ರೈತರು ಕೃಷಿ ಪ್ರಶಸ್ತಿಗೆ ಸ್ಪರ್ಧಿಸಬಹುದಾಗಿರುತ್ತದೆ.

10.ತರಬೇತಿ ಕಾರ್ಯಕ್ರಮಗಳು: ಈ ಯೋಜನೆಯಡಿ ಕೃಷಿ ವಿಸ್ತರಣಾ ಅಧಿಕಾರಿಗಳ ನಿರ್ವಹಣಾ

ಸಾಮರ್ಥ್ಯ ಮತ್ತು ರೈತರ/ ರೈತ ಮಹಿಳೆಯರ ವೃತ್ತಿ ಸಾಮರ್ಥ್ಯವನ್ನು ಹೆಚ್ಚಿಸಲು ಕೃಷಿ ತಾಂತ್ರಿಕತೆಗಳಿಗೆ ಸಂಬಂಧಿಸಿದಂತೆ ವಿಶೇಷ ತರಬೇತಿಗಳನ್ನು ಹಾಗೂ ಅಧ್ಯಯನ ಪ್ರವಾಸಗಳನ್ನು ಆಯೋಜಿಸಲಾಗುತ್ತದೆ.

11. ಕೃಷಿ ಭಾಗ್ಯ: ಮಳೆಯಾಶ್ರಿತ ಕೃಷಿ ನೀತಿ

ಒಣ ಹವಾಮಾನ ವಲಯಗಳ 24 ಬರ ಪೀಡಿತ ಜಿಲ್ಲೆಗಳಲ್ಲಿನ 106 ತಾಲ್ಲೂಕುಗಳಲ್ಲಿ ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನ ಮಾಡಲಾಗುವುದು. ರಾಜ್ಯದ ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವುದು, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ದತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸುವುದು ಮತ್ತು ಆದಾಯವನ್ನು ಹೆಚ್ಚಿಸುವುದು. ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ಕೆ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿರುತ್ತದೆ. ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ನೀರು ಸಂಗ್ರಹಣಾ ರಚನೆ (ಕೃಷಿ ಹೊಂಡ), ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (GI Wire Stone Fencing). ಹೊಂಡದಿಂದ ನೀರು ಎತ್ತಲು ಡೀಸೆಲ್/ಪೆಟ್ರೋಲ್/ಸೋಲಾರ್ ಪಂಪ್ ಸೆಟ್, ನೀರನ್ನು ಬೆಳೆಗೆ ಘಟಕಗಳನ್ನು ಒದಗಿಸಲು ಹಾಯಿಸಲು ಸೂಕ್ಷ್ಮ(ತುಂತುರು/ಹನಿ) ಯೋಜಿಸಲಾಗುತ್ತಿದೆ. ನೀರಾವರಿ

ಫಲಾನುಭವಿಯ ಆಯ್ಕೆ ಮಾನದಂಡಗಳು:

ಕ್ಷೇತ್ರ ಪರಿಶೀಲನೆಯಲ್ಲಿ ಅರ್ಹಗೊಂಡ ರಾಜ್ಯದ 5 ಕೃಷಿ ಹವಾಮಾನ ಒಣ ವಲಯದ (ಅಚ್ಚು ಕಟ್ಟು ಪ್ರದೇಶ ಹೊರತುಪಡಿಸಿ) ಎಲ್ಲಾ ಆಸಕ್ತ ರೈತರು ಯೋಜನೆಗೆ ಅರ್ಹರಾಗಿರುತ್ತಾರೆ.

ರೈತರ ಒಟ್ಟು ಸಾಗುವಳಿ ಕ್ಷೇತ್ರದ ಒಂದು ಸರ್ವೆ ನಂಬರ್ ನಲ್ಲಿ ಕನಿಷ್ಠ 1 ಎಕರೆ (single land parcel).

ಕೃಷಿ ಭಾಗ್ಯ ಯೋಜನೆಯ ಪೂರ್ಣ ಪ್ಯಾಕೇಜ್‌ನ ಘಟಕಗಳನ್ನು ಅನುಷ್ಠಾನಗೊಳಿಸಲು ಆಸಕ್ತಿಯಿರುವಂತಹ ರೈತರನ್ನು ಮಾತ್ರ ಆಯ್ಕೆ ಮಾಡಿ ಕ್ಷೇತ್ರ ಪರಿಶೀಲನ ಕೈಗೊಳ್ಳಲಾಗುವುದು.

ಹಿಂದಿನ ಸಾಲುಗಳಲ್ಲಿ ಕೃಷಿ ಭಾಗ್ಯ ಯೋಜನೆ ಅಥವ ಇನ್ಯಾವುದೇ ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಯಾಗಿರುವ ರೈತರು ಸದರಿ ಯೋಜನೆಗೆ ಅರ್ಹತೆ ಹೊಂದಿರುವುದಿಲ್ಲ

ಪರಿಶಿಷ್ಟ ಜಾತಿ/ಪ.ಪಂಗಡ ರೈತರು ಸರ್ಕಾರದ ನಿರ್ದಿಷ್ಟ ಅನುಪಾತದನ್ವಯ ಅರ್ಹರಾಗಿರುತ್ತಾರೆ.

]]>
Thu, 08 Jan 2026 21:26:00 +0530 shivuagrico
Ration card list&ಮತ್ತೆ 4.5 ಲಕ್ಷ ರೇಷನ್ ಕಾರ್ಡ್ ರದ್ದು,ರದ್ದಾದ ಪಟ್ಟಿಯಲ್ಲಿರುವವರಿಗಿಲ್ಲ ರೇಷನ್,ಗೃಹಲಕ್ಷ್ಮಿ ಹಣ https://krushirushi.in/Ration-card-list-2377 https://krushirushi.in/Ration-card-list-2377 Ration card list-ಮತ್ತೆ 4.5 ಲಕ್ಷ ರೇಷನ್ ಕಾರ್ಡ್ ರದ್ದು,ರದ್ದಾದ ಪಟ್ಟಿಯಲ್ಲಿರುವವರಿಗಿಲ್ಲ ರೇಷನ್,ಗೃಹಲಕ್ಷ್ಮಿ ಹಣ

ಗ್ಯಾರಂಟಿ ಯೋಜನೆಗಳ ಆರ್ಥಿಕ ಕಡಿಮೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಿಗದಿತ ಮಾನದಂಡ ಉಲ್ಲಂಘಿಸಿ ಪಡೆದುಕೊಂಡಿದ್ದ ಸುಮಾರು 4.50 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿದೆ.


ರದ್ದುಗೊಂಡ ಕಾರ್ಡ್ ದಾರರು ಸಹಜವಾಗಿಯೇ ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳಿಂದ ಹೊರಗುಳಿಯಲಿದ್ದಾರೆ.

ಇದರಿಂದ ರಾಜ್ಯದ ಬೊಕ್ಕಸಕ್ಕೆ ಪ್ರತಿ ತಿಂಗಳು ಸುಮಾರು 110 ಕೋಟಿ ರೂಪಾಯಿಗೂ ಅಧಿಕ ಹಣ ಉಳಿತಾಯವಾಗುತ್ತದೆ.

ರಾಜ್ಯಾದ್ಯಂತ ಆಹಾರ ಇಲಾಖೆ 4.50 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿದೆ. ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿಯಿಂದ 14.50 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇವರು ಅಧಿಕ ಆದಾಯ ಹೊಂದಿದವರು ಮತ್ತು ಕುಟುಂಬ ಸದಸ್ಯರು ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ. ಹೀಗಾಗಿ ಈ ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆ ಪ್ರಯೋಜನ ನಿಂತಿದೆ. ಇದೊಂದೇ ಯೋಜನೆಯಿಂದ ತಿಂಗಳಿಗೆ ಸುಮಾರು 90 ಕೋಟಿ ಉಳಿತಾಯವಾಗುತ್ತದೆ. ಈ ಫಲಾನುಭವಿಗಳಿಗೆ ತಿಂಗಳಿಗೆ 72.50 ಲಕ್ಷ ಕ್ವಿಂಟಲ್ ಪಡಿತರ ವಿತರಿಸಲಾಗುತ್ತಿತ್ತು. ಇದಕ್ಕೆ ವೆಚ್ಚವಾಗುತ್ತಿದ್ದ ಅಂದಾಜು 22 ಕೋಟಿ ರೂಪಾಯಿ ಉಳಿತಾಯವಾಗಿದೆ.

7,76,206 ಬಿಪಿಎಲ್ ಕಾರ್ಡುಗಳನ್ನು ಶಂಕಾಸ್ಪದ ಪಟ್ಟಿಗೆ ಸೇರ್ಪಡೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇವು ಕೂಡ ರದ್ದಾಗುವ ಸಾಧ್ಯತೆ ಇದೆ.

ಅನರ್ಹ ಪಟ್ಚಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಈ ತಿಂಗಳಿನಿಂದ ಅನ್ನಭಾಗ್ಯ ಹಾಗೂ ಗೃಹಲಕ್ಷ್ನಿ ಹಣ ಸಿಗುವುದಿಲ್ಲ

]]>
Thu, 08 Jan 2026 07:55:02 +0530 shivuagrico
Ksheera sanjeevini yojane&ಕ್ಷೀರ ಸಂಜೀವಿನಿ ಯೋಜನೆಯಡಿ ಹಸು ಸಾಕಾಣಿಕೆ ಮಾಡುವವರಿಗೆ ಸಿಗಲಿದೆ ಪ್ರತಿ ತಿಂಗಳು 3,500 ರೂಪಾಯಿ https://krushirushi.in/Ksheera-sanjeevini-yojane-2379 https://krushirushi.in/Ksheera-sanjeevini-yojane-2379 Ksheera sanjeevini yojane-ಕ್ಷೀರ ಸಂಜೀವಿನಿ ಯೋಜನೆಯಡಿ ಹಸು ಸಾಕಾಣಿಕೆ ಮಾಡುವವರಿಗೆ ಸಿಗಲಿದೆ ಪ್ರತಿ ತಿಂಗಳು 3,500 ರೂಪಾಯಿ

ಕೃಷಿಯಂತೆ ಹೈನುಗಾರಿಕೆಯನ್ನು ನಂಬಿ ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸುತ್ತಿವೆ. ಹೈನುಗಾರಿಕೆ ಮೂಲಕ ಗ್ರಾಮೀಣ ಮಹಿಳೆಯರ ಸಾಮಾಜಿಕ, ಆರ್ಥಿಕ ಮಟ್ಟವನ್ನು ಸುಧಾರಿಸಲು ಕ್ಷೀರ ಸಂಜೀವಿನಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸೊಸೈಟಿ (KSRLPS) ಮತ್ತು ಕರ್ನಾಟಕ ಹಾಲು ಮಹಾಮಂಡಳಿ (KMF) ಜಂಟಿಯಾಗಿ "ಕ್ಷೀರ ಸಂಜೀವಿನಿ" ಯೋಜನೆಯನ್ನು ಪ್ರಾರಂಭಿಸಿವೆ. ಈ ಯೋಜನೆಯ ಮುಖ್ಯ ಉದ್ದೇಶವು ಗ್ರಾಮೀಣ ಪ್ರದೇಶದ ಬಡ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮತ್ತು ಹೈನುಗಾರಿಕೆಯನ್ನು ಅವರ ಜೀವನೋಪಾಯದ ಮೂಲವನ್ನಾಗಿ ಪ್ರೋತ್ಸಾಹಿಸುವುದು. ಈ ಹಿನ್ನೆಲೆಯಲ್ಲಿ ಏನಿದು ಕ್ಷೀರ ಸಂಜೀವಿನಿ ಯೋಜನೆ? ಇದರಿಂದ ರೈತರಿಗೆ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿಯೋಣ.

ಏನಿದು ಕ್ಷೀರ ಸಂಜೀವಿನಿ ಯೋಜನೆ?

ಕ್ಷೀರ ಸಂಜೀವಿನಿ ಯೋಜನೆಯು ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ಹಾಲು ಒಕ್ಕೂಟದ ಯೋಜನೆಯಾಗಿದ್ದು, ಮಹಿಳಾ ಹೈನು ಸಹಕಾರಿ ಸಂಘಗಳನ್ನು ಉತ್ತೇಜಿಸುವ ಮೂಲಕ ಹಾಗೂ ಹೈನುಗಾರಿಕೆಯ ಮೂಲಕ ಬಡ ಗ್ರಾಮೀಣ ಮಹಿಳೆಯರ ಸಬಲೀಕರಣದ ಗುರಿಯನ್ನು ಹೊಂದಿದೆ. ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಮಿಷನ್ ಸಹಯೋಗದೊಂದಿಗೆ ಪ್ರಾರಂಭಿಸಲಾದ ಈ ಉಪಕ್ರಮವು ಹೈನುಗಾರಿಕೆಯಲ್ಲಿ ತೊಡಗಿರುವ ಮಹಿಳೆಯರಿಗೆ ತರಬೇತಿ, ಆರ್ಥಿಕ ಬೆಂಬಲ ಮತ್ತು ಸಂಪನ್ಮೂಲಗಳನ್ನು ಒದಗಿಸುತ್ತದೆ. ಈ ಮೂಲಕ ಅವರ ಆದಾಯ ಮತ್ತು ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಹೆಚ್ಚಿಸುತ್ತದೆ. ಮೊದಲ ಹಂತದ ಯೋಜನೆ 2014ರ ಏಪ್ರಿಲ್‌ನಲ್ಲಿ ಪ್ರಾರಂಭವಾಯಿತು. ಪ್ರಸ್ತುತ ಕ್ಷೀರ ಸಂಜೀವಿನಿ ಯೋಜನೆಯನ್ನು 3ನೇ ಹಂತದಲ್ಲಿ ಜಾರಿಗೊಳಿಸಲಾಗುತ್ತಿದೆ.

ಯೋಜನೆಯ ಉದ್ದೇಶ ಮತ್ತು ಗುರಿಗಳು

ಕ್ಷೀರ ಸಂಜೀವಿನಿ ಯೋಜನೆಯ ಪ್ರಮುಖ ಗುರಿ ಸಮಾಜದ ಹಿಂದುಳಿದ ವರ್ಗದ ಮಹಿಳೆಯರಿಗೆ, ಅಂದರೆ ಹಿಂದುಳಿದ ಜಾತಿಗಳು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿಗಳು/ಪರಿಶಿಷ್ಟ ಪಂಗಡಗಳು, ಬಿಪಿಎಲ್ ಕುಟುಂಬಗಳು ಮತ್ತು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಆದಾಯದ ಮೂಲವನ್ನು ಒದಗಿಸುವುದು. ಈ ಯೋಜನೆಯ ಮೂಲಕ ಸುಮಾರು 10,000 ಮಹಿಳೆಯರಿಗೆ ಸಹಾಯ ಮಾಡಲು ಉದ್ದೇಶಿಸಲಾಗಿದೆ. ಕ್ಷೀರ ಸಂಜೀವಿನಿ ಯೋಜನೆಯನ್ನು ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗಿದ್ದು, ಬೇಡಿಕೆಗೆ ತಕ್ಕಂತೆ ಯೋಜನೆಯ ಸೌಲಭ್ಯಗಳನ್ನು ವಿಸ್ತರಿಸಲಾಗುತ್ತಿದೆ.

ಯೋಜನೆಯ ಮುಖ್ಯ ಪ್ರಯೋಜನಗಳು

  • ಮಹಿಳಾ ಸಬಲೀಕರಣ: ಯೋಜನೆಯು ಗ್ರಾಮೀಣ ಮಹಿಳೆಯರಿಗೆ ಸುಸ್ಥಿರ ಆದಾಯದ ಮೂಲವನ್ನು ಒದಗಿಸುವ ಮೂಲಕ ಅವರ ಸಬಲೀಕರಣಕ್ಕೆ ಸಹಾಯ ಮಾಡುತ್ತದೆ.
  • ಸಹಕಾರಿ ಸಂಘಗಳ ಸ್ಥಾಪನೆ: 250 ಮಹಿಳಾ ಡೈರಿ ಸಹಕಾರಿ ಸಂಘಗಳ ಸ್ಥಾಪನೆಗೆ ಇದು ಸಹಾಯ ಮಾಡಿದೆ.
  • ರಾಸು ಖರೀದಿಗೆ ನೆರವು: ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವ ಉದ್ದೇಶದಿಂದ ರಾಸುಗಳನ್ನು ಖರೀದಿ ಮಾಡಲು ಬಡ್ಡಿ ರಹಿತವಾಗಿ 46 ಸಾವಿರ ಸಾಲವನ್ನು ನೀಡಲಾಗುತ್ತಿದೆ.
  • ಆದಾಯ ಹೆಚ್ಚಳ: ಯೋಜನೆಯಲ್ಲಿ ಭಾಗವಹಿಸಿದ ಮಹಿಳೆಯರ ಮಾಸಿಕ ನಿವ್ವಳ ಆದಾಯದಲ್ಲಿ 3,000 ರೂ. ರಿಂದ 3,500 ರೂ. ವರೆಗೆ ಹೆಚ್ಚಳವಾಗುವ ಗುರಿಯನ್ನು ಹೊಂದಿದೆ.
  • ಉದ್ಯೋಗ ಸೃಷ್ಟಿ: ಯೋಜನೆಯು ಗ್ರಾಮೀಣ ಮಹಿಳೆಯರಿಗೆ ನೇರ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ.
  • ಹಣಕಾಸು ನೆರವು: ಫಲಾನುಭವಿಗಳಿಗೆ ಬಡ್ಡಿ-ರಹಿತ ಸಾಲ ಮತ್ತು ನಿರ್ವಹಣಾ ವೆಚ್ಚಕ್ಕಾಗಿ ಅನುದಾನ ದೊರೆಯುತ್ತದೆ.
  • ತರಬೇತಿ ಮತ್ತು ಸಂಪನ್ಮೂಲಗಳು: ಜಾನುವಾರು ಸಾಕಣೆ, ನಿರ್ವಹಣೆ ಮತ್ತು ಪಶು ಆಹಾರದ ಬಗ್ಗೆ ತರಬೇತಿ ನೀಡಲಾಗುತ್ತದೆ.
  • ಪ್ರಾಣಿಗಳ ಆರೋಗ್ಯ ರಕ್ಷಣೆ ಮತ್ತು ವಿಮೆ: ಇದು ಜಾನುವಾರುಗಳ ಆರೋಗ್ಯ ರಕ್ಷಣೆ ಮತ್ತು ವಿಮೆಯನ್ನು ಒದಗಿಸುತ್ತದೆ.

ಯೋಜನೆಯ ರಚನೆ ಮತ್ತು ಅನುಷ್ಠಾನ

ಈ ಯೋಜನೆಯನ್ನು ಒಟ್ಟು 250 ಮಹಿಳಾ ಡೈರಿ ಸಹಕಾರಿ ಸಂಘಗಳ ಮೂಲಕ ಜಾರಿಗೊಳಿಸಲಾಗುತ್ತದೆ. ಪ್ರತಿ ಸಂಘದಿಂದ 40 ಟಾರ್ಗೆಟ್ ಗುಂಪುಗಳ ಸದಸ್ಯರನ್ನು ಗುರುತಿಸಲಾಗುತ್ತದೆ. ಈ ಮೂಲಕ ಒಟ್ಟು 10,000 ಮಹಿಳೆಯರಿಗೆ (250 x 40 = 10,000) ನಿಶ್ಚಿತ ಜೀವನೋಪಾಯವನ್ನು ಒದಗಿಸುವ ಗುರಿ ಹೊಂದಿದೆ. ಈ ಯೋಜನೆಗೆ KSRLPS (ಸಂಜೀವಿನಿ) ಬಹುಪಾಲು ಹಣವನ್ನು ಒದಗಿಸಿದ್ದು, ಉಳಿದ ಮೊತ್ತವನ್ನು KMF ನೀಡಿದೆ.

ಅರ್ಹತಾ ಮಾನದಂಡಗಳು

ಯೋಜನೆಯ ಪ್ರಯೋಜನ ಪಡೆಯಲು ಬಯಸುವ ಮಹಿಳೆಯರು ಈ ಕೆಳಗಿನ ಮಾನದಂಡಗಳನ್ನು ಪೂರೈಸಬೇಕು:

  • ಯೋಜನೆಯ ಫಲಾನುಭವಿಗಳು ಮಹಿಳೆಯಾಗಿರಬೇಕು.
  • ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸೇರಿದವರಾಗಿರಬೇಕು.
  • ಕೆಎಂಎಫ್ (KMF) ಈ ಸಂಘಗಳ ಸದಸ್ಯರ ಸರ್ವೇಕ್ಷಣೆಯ ಮೂಲಕ ಅರ್ಹ ಫಲಾನುಭವಿಗಳನ್ನು ಗುರುತಿಸುತ್ತದೆ.

 

ಇತರೆ ಪೂರಕ ಯೋಜನೆಗಳು

  • ಕ್ಷೀರ ಸಂಜೀವಿನಿ ಯೋಜನೆಯು ಮಹಿಳಾ ಡೈರಿ ಸಹಕಾರಿ ಸಂಘಗಳ ಸಾಮರ್ಥ್ಯ ಹೆಚ್ಚಿಸುವತ್ತ ಗಮನಹರಿಸಿದರೆ, ಕರ್ನಾಟಕದಲ್ಲಿ ಹಾಲು ಉತ್ಪಾದಕರಿಗೆ ನೇರ ಆರ್ಥಿಕ ನೆರವು ನೀಡುವ ಇತರ ಕೆಲವು ಯೋಜನೆಗಳೂ ಇವೆ:
  • ಹಾಲಿಗೆ ಪ್ರೋತ್ಸಾಹ ಧನ: ಹಾಲು ಉತ್ಪಾದಕರು ಸಹಕಾರಿ ಸಂಘಗಳಿಗೆ ಪೂರೈಸುವ ಪ್ರತಿ ಲೀಟರ್ ಹಾಲಿಗೆ ಸರ್ಕಾರವು 5 ರೂ. ಪ್ರೋತ್ಸಾಹ ಧನ ನೀಡುತ್ತದೆ.
  • ಕಿಸಾನ್ ಕ್ರೆಡಿಟ್ ಕಾರ್ಡ್ ಬಡ್ಡಿ ಸಬ್ಸಿಡಿ: ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಮೂಲಕ ಅಲ್ಪಾವಧಿ ಸಾಲ ಪಡೆಯುವ ಡೈರಿ ರೈತರಿಗೆ ಶೇ.2ರಷ್ಟು ಬಡ್ಡಿ ಸಬ್ಸಿಡಿ ಲಭ್ಯವಿದೆ. ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿದರೆ ಹೆಚ್ಚುವರಿ ಶೇ.3ರಷ್ಟು ಸಬ್ಸಿಡಿ ದೊರೆಯುತ್ತದೆ.
  • ಕ್ಷೀರಧಾರೆ ಯೋಜನೆ: ಕೆಎಂಎಫ್‌ನಿಂದ ಜಾರಿಯಾಗಿರುವ ಈ ಯೋಜನೆಯು ಡೈರಿ ಫಾರ್ಮಿಂಗ್ ಅನ್ನು ಹೆಚ್ಚು ಲಾಭದಾಯಕವಾಗಿಸಲು ಮತ್ತು ಹಾಲಿನ ಉತ್ಪಾದನೆಯನ್ನು ಹೆಚ್ಚಿಸಲು ವಿವಿಧ ಪ್ರೋತ್ಸಾಹಕಗಳನ್ನು ನೀಡುತ್ತದೆ.

ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಕ್ಷೀರ ಸಂಜೀವಿನಿ ಯೋಜನೆಯು ವ್ಯಕ್ತಿಗಳಿಗೆ ನೇರ ಅರ್ಜಿ ಪ್ರಕ್ರಿಯೆಯನ್ನು ಹೊಂದಿಲ್ಲ. ಇದು ಹೈನುಗಾರಿಕೆಯ ಮೂಲಕ ಮಹಿಳೆಯರ ಸಬಲೀಕರಣದ ಗುರಿಯನ್ನು ಹೊಂದಿರುವ ಯೋಜನೆಯಾಗಿದೆ ಮತ್ತು ಮಹಿಳಾ ಹೈನು ಸಹಕಾರಿ ಸಂಘಗಳನ್ನು ಸ್ಥಾಪಿಸುವ ಮೂಲಕ ಇದರ ಪ್ರಯೋಜನಗಳನ್ನು ತಲುಪಿಸಲಾಗುತ್ತದೆ. ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಘ ಮತ್ತು ಕರ್ನಾಟಕ ಹಾಲು ಒಕ್ಕೂಟ ಅನುಷ್ಠಾನಗೊಳಿಸುವ ಸಂಸ್ಥೆಗಳಾಗಿವೆ.

]]>
Wed, 07 Jan 2026 21:45:45 +0530 shivuagrico
Rabi crop survey app 2025&ಹಿಂಗಾರು ಬೆಳೆ ಸಮೀಕ್ಷೆ ಮಾಡಿ ಬೆಳೆ ವಿಮೆ ಪಡೆಯಿರಿ https://krushirushi.in/Rabi-crop-survey-app-2025 https://krushirushi.in/Rabi-crop-survey-app-2025 2025-26 ನೇ ಸಾಲಿನ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ನನ್ನ ಬೆಳೆ ನನ್ನ ಹಕ್ಕು ಅಡಿಯಲ್ಲಿ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಡಿಸೆಂಬರ್ 1 ರಿಂದ ಆರಂಭಗೊಂಡಿದೆ. ಕಳೆದ ವರ್ಷದಂತೆ ಈ ವರ್ಷವು ಸಹ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ದಾಖಲಿಸಲು ಹಿಂಗಾರು ರೈತರ ಬೆಳೆ ಸಮೀಕ್ಷೆ 2025-26 ಎಂಬ ಹೆಸರಿನ ಮೊಬೈಲ್ ಅಪ್ಲಿಕೇಶನ್‍ನ್ನು ಗೂಗಲ್ ಪ್ಲೇ ಸ್ಟೋರ್‍ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.

ಜನೆವರಿ 15, 2026 ರೊಳಗಾಗಿ ಬೆಳೆ ವಿವರಗಳನ್ನು ಆಯಪ್ ಮೂಲಕ ಅಪಲೋಡ್ ಮಾಡಬೇಕು. ಮೊಬೈಲ್ ಆಯಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ. ಮತ್ತು ಖಾಸಗಿ ನಿವಾಸಿಗಳಿಂದ ಬೆಳೆ ಸಮೀಕ್ಷೆ ಕಾರ್ಯವು ಜನೆವರಿ 30, 2026 ರಂದು ಪೂರ್ಣಗೊಳ್ಳಲಿದ್ದು, ಒಂದು ವೇಳೆ ಖಾಸಗಿ ನಿವಾಸಿಗಳು ನಮೂದಿಸಿದ ಬೆಳೆಯು ತಪ್ಪಾಗಿದ್ದಲ್ಲಿ ರೈತರು ಫೆಬ್ರವರಿ 15, 2026 ರೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬೇಕು.

ಹೆಚ್ಚಿನ ತಾಂತ್ರಿಕ ಮಾಹಿತಿಗಾಗಿ ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ: 18004253553 ಗೆ ಕರೆಮಾಡಿ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ.ಬೆಳೆ ಸಮೀಕ್ಷೆ ಮಾಹಿತಿಯು ಕನಿಷ್ಠ ಬೆಂಬಲ ಯೋಜನೆಯಡಿ (ಎಮ್‍ಎಸ್‍ಪಿ) ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಬೆಳೆ ಹಾನಿ ಪರಿಹಾರ ವಿತರಿಸಲು, ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಮತ್ತು ಇತರ ಮಾನದಂಡಗಳಿಗೆ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ನಿಖರವಾಗಿ ತಾವೇ ಸಮೀಕ್ಷೆ ಮಾಡಲು ಕೃಷಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Bele samikshe status-ಬೆಳೆ ಸಮಿಕ್ಷೆ ಸರಿಯಾಗಿ ಆದ ಬೆಳೆಗಳಿಗೆ ಮಾತ್ರ ಬೆಳೆವಿಮೆ ಬೆಳೆಹಾನಿ ಹಣ,ನಿಮ್ಮ ಬೆಳೆ ಸಮಿಕ್ಷೆ ಸರಿಯಾಗಿ ಆಗಿದೆಯಾ ಚೆಕ್ ಮಾಡಿಕೊಳ್ಳಿ

ಬೆಳೆ ಸಮೀಕ್ಷೆ(Bele samikshe) ಮೂಲಕ ಸಂಗ್ರಹಿಸಲಾದ ಬೆಳೆ
ಮಾಹಿತಿ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ ದರ್ಶಕ ಮೊಬೈಲ್ ಆ್ಯಪ್(Bele darshaka App)ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ(Crop survey portal) ಮೂಲಕ ಆಕ್ಷೇಪಣೆ ಸಲ್ಲಿಸಬಹುದು. 

ಬೆಳೆ ಸಮೀಕ್ಷೆ ದತ್ತಾಂಶವನ್ನು ಬೆಳೆವಿಮೆ(Bele vime), ಬೆಂಬಲ ಬೆಲೆ ಯೋಜನೆಯಡಿ(MSP) ಬೆಳೆ ಮಾರಾಟ ಮಾಡಲು, ಬೆಳೆ ನಷ್ಟ ಪರಿಹಾರ(bele hani) ಹಾಗೂ ಇತರ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಳಕೆ ಮಾಡಲಾಗುವುದು. ಆದ್ದರಿಂದ ರೈತರು ತಾವು ಬೆಳೆದ ಬೆಳೆ ಹಾಗೂ ಬೆಳೆ ಸಮೀಕ್ಷೆಯಲ್ಲಿ (crop survey)ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಖಾತ್ರಿಪಡಿಸಿಕೊಳ್ಳಬೇಕು. ಒಂದು ವೇಳೆ ಭಿನ್ನವಾಗಿದ್ದಲ್ಲಿ, ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ನಂತರದ ಆಕ್ಷೇಪಣೆ ಸ್ವೀಕರಿಸಲಾಗುವುದಿಲ್ಲ.

ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಗೂಗಲ್ ಪ್ಲೇ ಸ್ಟೋರ್ ಮೂಲಕ ಅಥವಾ https://play.google.com/store/apps/details?id=com.crop.offcskharif_2021  ಲಿಂಕ್ ಮೇಲೆ ಕ್ಲಿಕ್ ಮಾಡಿ bele Darshaka application ಇನ್ಸ್ ಸ್ಟಾಲ್ ಮಾಡಿಕೊಳ್ಳಬಹುದು. 

ನಂತರ ರೈತ select ಮಾಡಿ

 ನಂತರ ವರ್ಷ,ಋುತು, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ.

ನಂತರ ಸರ್ವೇ ನಂಬರ್ ಹಾಕಿ,ಹಿಸ್ಸಾಆಯ್ಕೆ ಮಾಡಿ,ಸಮೀಕ್ಷೆಯ  ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ

ನಂತರ ಬೆಳೆವಿವರ ವೀಕ್ಷಿಸಿ ಮೇಲೆ ಕ್ಲಿಕ್ ಮಾಡಿ

ನಂತರ photo ಮೇಲೆ ಕ್ಲಿಕ್ ಮಾಡಿದರೆ ನೀವು ಬೆಳೆದ ಬೆಳೆ ಹಾಗೂ ಫೋಟೊ ಅಪ್ಲೊಡ್ ಸರಿಯಾಗಿರುವುದನ್ನು ಪರಿಕ್ಷೀಸಿ.

ಬೆಳೆ ಸಮಿಕ್ಷೆ ಸರಿಯಾಗಿರದಿದ್ದರೆ,ಮತ್ತೆ ಬೆಳೆ ಸಮಿಕ್ಷೆ ಮಾಡಿ ಸರಿಪಡಿಸಲು ಅವಕಾಶವಿರುತ್ತದೆ.

ಏನಿದು ಬೆಳೆ ದರ್ಶಕ ಆ್ಯಪ್?

ಈ ಅಪ್ಲಿಕೇಶನ್ ಮಾಡಿದ ಉದ್ದೇಶ ಬೆಳೆ ಸಮೀಕ್ಷೆಯನ್ನು (Crop survey)ನೋಡಲು.. ಇದರಲ್ಲಿ ನೀವು ಅಪ್‌ಲೋಡ್ ಮಾಡಿದ ಚಿತ್ರಗಳನ್ನು ಮತ್ತು ಸಮೀಕ್ಷೆ ಮಾಡಿದ ಸರ್ವೇಯರ್ ವಿವರಗಳನ್ನು ನೋಡಬಹುದು.

ತಮ್ಮ ಮೊಬೈಲ್ ಮೂಲಕ ಬೆಳೆಗಳ ಸಮೀಕ್ಷೆ(Bele samikshe) ಮಾಡಬಹುದು. ಅಥವಾ ನೆರೆಯ ಖಾಸಗಿ ವ್ಯಕ್ತಿಗಳ (Private resident) ಮೊಬೈಲ್ ಮೂಲಕ ಜಮೀನುಗಳ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ನಿಮ್ಮ ಜಮೀನಿನ ಸರ್ವೆ ನಂಬರ್(Survey number) ಮತ್ತು ಜಮೀನಿನ ಫೊಟೋ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಮೊಬೈಲ್ ನಲ್ಲಿ Bele darshak app ಮೂಲಕ ಕ್ಷಣಾರ್ಧದಲ್ಲಿ  ನೋಡಬಹುದು. ಒಂದು ವೇಳೆ ತಪ್ಪಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು. 

ಬೆಳೆ ದರ್ಶಕ್ ಆ್ಯಪ್(bele darshaka app) ಇನ್ಸ್ ಸ್ಟಾಲ್ ಮಾಡಿಕೊಂಡ ನಂತರ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಇನ್ನಿತರ ಮಾಹಿತಿ ನಮೂದಿಸಬೇಕು. ಬೆಳೆ ದರ್ಶಕ್ ಆ್ಯಪ್(Bele darshaka application) ಮೂಲಕ ಜಮೀನಿನಲ್ಲಿ ಬೆಳೆ ಸಮೀಕ್ಷೆ (Bele samikshe)ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ (Crop survey)ಸಮಯದಲ್ಲಿ ತೆಗೆಯಲಾದ ಜಿಪಿಎಸ್ ಆಧಾರಿತ (GPS Photo)ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ಅಲ್ಲದೆ ರೈತರ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ, (Mobile number)ರೈತರು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ನೋಡಬಹುದು.

 ಒಂದು ವೇಳೆ ಮಾಹಿತಿ ತಪ್ಪಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು.ಮೇಲ್ವಿಚಾರಕರು ಸೂಕ್ತ ಬೆಳೆಗಳನ್ನು ದಾಖಲಿಸಿ ರೈತರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುತ್ತಾರೆ. ಇನ್ನೇಕೆ ತಡ ಒಮ್ಮೆ ನಿಮ್ಮ ಬೆಳೆ ಸಮೀಕ್ಷೆಯಲ್ಲಿ ಎಲ್ಲಾ ಸರ್ವೆ ನಂಬರ್, ಮಾಹಿತಿ ಹಾಗೂ ಫೋಟೋ ಸರಿಯಾಗಿ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಡಿ

]]>
Wed, 07 Jan 2026 14:54:10 +0530 shivuagrico
Post office franchise&ಅಂಚೆ ಇಲಾಖೆ ಜೊತೆಗೂಡಿ ಸ್ವಂತ ಉದ್ಯಮ ಆರಂಭಿಸಿ, ತಿಂಗಳಿಗೆ 80,000 ರೂ.ವರೆಗೆ ಗಳಿಸಿ! https://krushirushi.in/Post-office-franchise-2376 https://krushirushi.in/Post-office-franchise-2376 Post office franchise-ಅಂಚೆ ಇಲಾಖೆ ಜೊತೆಗೂಡಿ ಸ್ವಂತ ಉದ್ಯಮ ಆರಂಭಿಸಿ, ತಿಂಗಳಿಗೆ 80,000 ರೂ.ವರೆಗೆ ಗಳಿಸಿ!

ಭಾರತೀಯ ಅಂಚೆ ಇಲಾಖೆಯು 'ಹೊಸ ಫ್ರಾಂಚೈಸಿ ಯೋಜನೆ 2.0' ಅನ್ನು ಪರಿಚಯಿಸಿದೆ. ಜನವರಿ 1, 2026 ರಿಂದ ಜಾರಿಗೆ ಬರುವ ಈ ಯೋಜನೆಯು ಯುವಕರಿಗೆ ಸ್ವಯಂ ಉದ್ಯೋಗದ ಅವಕಾಶ ನೀಡುತ್ತದೆ. ಕಡಿಮೆ ಹೂಡಿಕೆಯಲ್ಲಿ ಅಂಚೆ ಸೇವೆಗಳನ್ನು ಒದಗಿಸಿ ಆಕರ್ಷಕ ಕಮಿಷನ್ ಗಳಿಸಬಹುದು. ಆಧುನಿಕ ತಂತ್ರಜ್ಞಾನ ಮತ್ತು ಡಿಜಿಟಲ್ ಸೇವೆಗಳಿಗೆ ಒತ್ತು ನೀಡಲಾಗಿದೆ. ಅರ್ಹತೆ, ಹೂಡಿಕೆ, ಕಮಿಷನ್ ಮತ್ತು ಅರ್ಜಿ ಸಲ್ಲಿಕೆ ವಿವರಗಳನ್ನು ತಿಳಿಯಿರಿ.

ನೀವು ಅಂಚೆ ಇಲಾಖೆಯ ಫ್ರಾಂಚೈಸಿಯನ್ನು ಮುನ್ನಡೆಸಲು ಬಯಸುತ್ತಿದ್ದೀರಾ? ಹಾಗಿದ್ದರೆ, ನಿಮಗೆ ಇಲ್ಲಿದೆ ಎಂದು ಸುವರ್ಣಾವಕಾಶ. ಭಾರತೀಯ ಅಂಚೆ ಇಲಾಖೆಯು ದೇಶದಾದ್ಯಂತ ತನ್ನ ಸೇವೆಗಳನ್ನು ವಿಸ್ತರಿಸಲು ಮತ್ತು ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗದ ಅವಕಾಶವನ್ನು ನೀಡಲು "ಹೊಸ ಫ್ರಾಂಚೈಸಿ ಯೋಜನೆ 2.0" ಅನ್ನು ಪರಿಚಯಿಸಿದೆ. ಈ ಯೋಜನೆಯು ಜನವರಿ 01, 2026 ರಿಂದ ಜಾರಿಗೆ ಬಂದಿದ್ದು, ಆಧುನಿಕ ತಂತ್ರಜ್ಞಾನ ಮತ್ತು ಡಿಜಿಟಲ್ ಸೇವೆಗಳ ಮೇಲೆ ಹೆಚ್ಚಿನ ಗಮನ ಹರಿಸಿದೆ. ಈ ಹಿನ್ನೆಲೆಯಲ್ಲಿ ಫ್ರಾಂಚೈಸಿಯನ್ನು ಪಡೆಯುವುದು ಹೇಗೆ? ಪ್ರಯೋಜನಗಳೇನು? ಅರ್ಜಿ ಸಲ್ಲಿಕೆ ಹೇಗೆ ಇತ್ಯಾದಿ ವಿವರಗಳನ್ನು ತಿಳಿಯೋಣ.

ಹೊಸ ಫ್ರಾಂಚೈಸಿ ಯೋಜನೆ 2.0 ಎಂದರೇನು?

ಭಾರತೀಯ ಅಂಚೆ ಇಲಾಖೆಯ 'ಹೊಸ ಫ್ರಾಂಚೈಸಿ ಯೋಜನೆ 2.0' ಒಂದು ಮಹತ್ವದ ಉಪಕ್ರಮವಾಗಿದ್ದು, ಇದು 'ಆತ್ಮನಿರ್ಭರ ಭಾರತ' ಮತ್ತು 'ಡಿಜಿಟಲ್ ಇಂಡಿಯಾ' ಅಭಿಯಾನದ ಅಡಿಯಲ್ಲಿ ಅಂಚೆ ಸೇವೆಗಳಿಲ್ಲದ ಪ್ರದೇಶಗಳಲ್ಲಿ ಜನಸಾಮಾನ್ಯರಿಗೆ ಸ್ವಯಂ ಉದ್ಯೋಗದ ಅವಕಾಶಗಳನ್ನು ಕಲ್ಪಿಸುತ್ತದೆ. ಅತ್ಯಂತ ಕಡಿಮೆ ಹೂಡಿಕೆಯೊಂದಿಗೆ ಸಣ್ಣ ಉದ್ಯಮಿಗಳು ಅಥವಾ ವ್ಯಕ್ತಿಗಳು ಅಂಚೆ ಚೀಟಿಗಳ ಮಾರಾಟ, ಸ್ಪೀಡ್ ಪೋಸ್ಟ್ ಬುಕಿಂಗ್, ಇ-ಕಾಮರ್ಸ್ ಪಾರ್ಸೆಲ್ ಮತ್ತು ಹಣಕಾಸು ಸೇವೆಗಳನ್ನು ಒದಗಿಸುವ ಮೂಲಕ ಆಕರ್ಷಕ ಕಮಿಷನ್ ಗಳಿಸಬಹುದು. ಈ ಯೋಜನೆಯು ಎಪಿಟಿ 2.0 ಎಂಬ ಸುಧಾರಿತ ತಾಂತ್ರಿಕ ವೇದಿಕೆಯನ್ನು ಬಳಸಿಕೊಂಡು ಡಿಜಿಟಲ್ ಪಾವತಿ, ರಿಯಲ್-ಟೈಮ್ ಟ್ರ್ಯಾಕಿಂಗ್ ಮತ್ತು ಸ್ಮಾರ್ಟ್ ಲಾಕರ್‌ಗಳಂತಹ ಆಧುನಿಕ ಸೌಲಭ್ಯಗಳನ್ನು ನೀಡುತ್ತದಲ್ಲದೆ, ಸರ್ಕಾರದ ಮಾನ್ಯತೆಯೊಂದಿಗೆ ಉದ್ಯೋಗಾಕಾಂಕ್ಷಿಗಳಿಗೆ ಸುಸ್ಥಿರ ಆದಾಯವನ್ನು ಖಚಿತಪಡಿಸುತ್ತದೆ.

ಅಂಚೆ ಕಚೇರಿ ಫ್ರಾಂಚೈಸಿ ಯೋಜನೆ ಪ್ರಮುಖ ಅಂಶಗಳು

  • ಈ ಹೊಸ ಯೋಜನೆಯನ್ನು ಭಾರತ ಸರ್ಕಾರದ 'ಡಿಜಿಟಲ್ ಇಂಡಿಯಾ' ಮತ್ತು 'ಸ್ಟಾರ್ಟ್ಅಪ್ ಇಂಡಿಯಾ' ಗುರಿಗಳಿಗೆ ಪೂರಕವಾಗುವಂತೆ ಅತ್ಯಂತ ಸುಧಾರಿತವಾಗಿ ವಿನ್ಯಾಸಗೊಳಿಸಲಾಗಿದೆ.
  • ಸೇವೆಯ ವ್ಯಾಪ್ತಿಯನ್ನು ವಿಸ್ತರಿಸುವ ಉದ್ದೇಶದಿಂದ, ಈಗ ಹೊಸ ನಗರ ಪ್ರದೇಶಗಳು, ದೊಡ್ಡ ಟೌನ್‌ಶಿಪ್‌ಗಳು, ಕೈಗಾರಿಕಾ ವಲಯಗಳು ಮತ್ತು ಶೈಕ್ಷಣಿಕ ಕ್ಯಾಂಪಸ್‌ಗಳಲ್ಲಿಯೂ ಫ್ರಾಂಚೈಸಿ ಆರಂಭಿಸಲು ಅವಕಾಶ ನೀಡಲಾಗಿದೆ.
  • ಎಪಿಟಿ 2.0 (APT 2.0) ಎಂಬ ನವೀನ ತಾಂತ್ರಿಕ ವೇದಿಕೆಯ ಮೂಲಕ ಆನ್‌ಲೈನ್ ಪಾರ್ಸೆಲ್ ಬುಕಿಂಗ್ ಮತ್ತು ಸ್ಮಾರ್ಟ್ ಲಾಕರ್‌ನಂತಹ ಆಧುನಿಕ ಡಿಜಿಟಲ್ ಸೇವೆಗಳನ್ನು ಜನರಿಗೆ ಒದಗಿಸಬಹುದು.
  • ಸಾಂಪ್ರದಾಯಿಕ ಅಂಚೆ ಸೇವೆಗಳ ಜೊತೆಗೆ ಇ-ಕಾಮರ್ಸ್ ಡೆಲಿವರಿ ಮತ್ತು ಇತರ ಆಧುನಿಕ ಸೇವೆಗಳನ್ನು ಸೇರ್ಪಡೆಗೊಳಿಸಿರುವುದರಿಂದ, ಫ್ರಾಂಚೈಸಿ ಮಾಲೀಕರು ಹೆಚ್ಚಿನ ಆದಾಯವನ್ನು ಗಳಿಸಲು ಉತ್ತಮ ಅವಕಾಶವಿದೆ.

ಪ್ರಯೋಜನಗಳೇನು?

  • ಭಾರತೀಯ ಅಂಚೆ ಇಲಾಖೆಯಂತಹ ಸರ್ಕಾರಿ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದುವುದರಿಂದ ಮಾರುಕಟ್ಟೆ ವೆಚ್ಚ ಕಡಿಮೆಯಾಗುತ್ತದೆ ಮತ್ತು ಗ್ರಾಹಕರಲ್ಲಿ ತಕ್ಷಣದ ವಿಶ್ವಾಸ ಮೂಡುತ್ತದೆ.
  • ಅಂಚೆ ಚೀಟಿಗಳು, ಸ್ಪೀಡ್ ಪೋಸ್ಟ್, ಪಾರ್ಸೆಲ್, ಮನಿ ಆರ್ಡರ್ ಮತ್ತು ಬಿಲ್ ಪಾವತಿಗಳಂತಹ ವಿವಿಧ ಸೇವೆಗಳ ಮೂಲಕ ಕಮಿಷನ್ ಗಳಿಸಬಹುದು; ಅಲ್ಲದೆ ಉತ್ತಮ ಕಾರ್ಯಕ್ಷಮತೆಗೆ ವಿಶೇಷ ಪ್ರೋತ್ಸಾಹಧನವೂ ದೊರೆಯುತ್ತದೆ.
  • ಅಂಚೆ ಇಲಾಖೆಯು ಫ್ರಾಂಚೈಸಿಗಳಿಗೆ ಪ್ರಮಾಣಿತ ತರಬೇತಿ, ಕಾರ್ಯವಿಧಾನದ ಮಾರ್ಗಸೂಚಿಗಳು ಮತ್ತು ನಿರಂತರ ಇಲಾಖಾ ಬೆಂಬಲವನ್ನು ಒದಗಿಸುತ್ತದೆ.
  • ಈ ಯೋಜನೆಯು ಯುವಕರು ಮತ್ತು ಉದ್ಯಮಿಗಳಿಗೆ ಸ್ವಾವಲಂಬಿಯಾಗಲು ಮತ್ತು ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಉತ್ತಮ ವೇದಿಕೆಯಾಗಿದೆ.
  • ಫ್ರಾಂಚೈಸಿಗಳು ಕೇವಲ ಅಂಚೆ ಸೇವೆಗಳಿಗೆ ಸೀಮಿತವಾಗದೆ, ಹಣಕಾಸು ಸೇವೆಗಳು ಮತ್ತು ಇ-ಕಾಮರ್ಸ್ ಲಾಜಿಸ್ಟಿಕ್ಸ್ ಸೇರಿದಂತೆ ವ್ಯಾಪಕ ಶ್ರೇಣಿಯ ಸೇವೆಗಳನ್ನು ಗ್ರಾಹಕರಿಗೆ ನೀಡಬಹುದು.
  • ಅಂಚೆ ಇಲಾಖೆಯ ಸೇವೆಗಳು ಅತ್ಯಗತ್ಯ ಸೇವೆಗಳಾಗಿರುವುದರಿಂದ, ವರ್ಷವಿಡೀ ಗ್ರಾಹಕರ ಸಂಖ್ಯೆ ಸ್ಥಿರವಾಗಿರುತ್ತದೆ ಮತ್ತು ವ್ಯವಹಾರದಲ್ಲಿ ನಿರಂತರತೆ ಇರುತ್ತದೆ.

ಅರ್ಹತಾ ಮಾನದಂಡಗಳು ಏನು?

  • ಈ ಫ್ರಾಂಚೈಸಿ ಪಡೆಯಲು ಅರ್ಜಿದಾರರು ಕನಿಷ್ಠ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಅವರಿಗೆ ಕಂಪ್ಯೂಟರ್ ಜ್ಞಾನ ಮತ್ತು ಸ್ಥಳೀಯ ಭಾಷೆಯ ಮೇಲೆ ಉತ್ತಮ ಹಿಡಿತವಿರಬೇಕು.
  • ಅರ್ಜಿದಾರರಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು, ಆದರೆ ಈ ಯೋಜನೆಗೆ ಯಾವುದೇ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿಲ್ಲ.
  • ಫ್ರಾಂಚೈಸಿ ನಡೆಸಲು ಜನನಿಬಿಡ ಪ್ರದೇಶಗಳಲ್ಲಿ ಸ್ವಂತ ಅಥವಾ ಬಾಡಿಗೆಗೆ ಪಡೆದ ಸಣ್ಣ ಮಳಿಗೆ ಅಥವಾ ಕಚೇರಿಯನ್ನು ಹೊಂದಿರಬೇಕು; ಇದಕ್ಕಾಗಿ ಸಣ್ಣ ಕಿರಾಣಿ ಅಂಗಡಿ ಅಥವಾ ಟೀ ಅಂಗಡಿ ಮಾಲೀಕರೂ ಸಹ ಅರ್ಜಿ ಸಲ್ಲಿಸಲು ಅವಕಾಶವಿದೆ.
  • ಕಚೇರಿಯಲ್ಲಿ ಕಡ್ಡಾಯವಾಗಿ ಲ್ಯಾಪ್‌ಟಾಪ್ ಅಥವಾ ಡೆಸ್ಕ್‌ಟಾಪ್, ಇಂಟರ್ನೆಟ್ ಸಂಪರ್ಕ, ತೂಕದ ಯಂತ್ರ, ಬಾರ್‌ಕೋಡ್ ಸ್ಕ್ಯಾನರ್ ಮತ್ತು ಪ್ರಿಂಟರ್‌ನಂತಹ ಮೂಲಸೌಕರ್ಯಗಳನ್ನು ಹೊಂದಿರಬೇಕು.

ಬಂಡವಾಳ ಹೂಡಿಕೆ ಎಷ್ಟು?

ಈ ಯೋಜನೆಯಡಿ ಫ್ರಾಂಚೈಸಿ ಪಡೆಯಲು ಸ್ಥಳ ಮತ್ತು ಒಪ್ಪಂದದ ಆಧಾರದ ಮೇಲೆ 5,000 ರೂ. ರಿಂದ 10,000 ರೂ. ವರೆಗೆ ಮರುಪಾವತಿಸಲ್ಪಡುವ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ. ಪೀಠೋಪಕರಣಗಳು, ಕಂಪ್ಯೂಟರ್ ಮತ್ತು ಇತರ ತಾಂತ್ರಿಕ ಉಪಕರಣಗಳು ಸೇರಿದಂತೆ ಮೂಲಸೌಕರ್ಯ ಸಿದ್ಧಪಡಿಸಲು ಅಂದಾಜು 1 ಲಕ್ಷ ರೂ.ದಿಂದ 1.5 ಲಕ್ಷ ರೂ.ದವರೆಗೆ ಒಟ್ಟು ಹೂಡಿಕೆಯ ಅಗತ್ಯವಿರುತ್ತದೆ. ಫ್ರಾಂಚೈಸಿ ಮಾಲೀಕರು ತಮ್ಮ ಕಾರ್ಯಕ್ಷಮತೆಯ ಆಧಾರದ ಮೇಲೆ ಮಾಸಿಕ 20,000 ರೂ.ದಿಂದ 80,000 ರೂ.ಕ್ಕಿಂತ ಹೆಚ್ಚು ಆದಾಯವನ್ನು ಗಳಿಸಲು ಅವಕಾಶವಿದೆ.

ಎಷ್ಟು ಕಮಿಷನ್ ಸಿಗಲಿದೆ?

  • ಕಮಿಷನ್ ದರಗಳ ಅನ್ವಯ, ಸ್ಪೀಡ್ ಪೋಸ್ಟ್ ಬುಕಿಂಗ್ ಮೇಲೆ ಒಟ್ಟು ಮಾಸಿಕ ವ್ಯವಹಾರದ 7% ರಿಂದ 25% ರಷ್ಟು ಪಾಲನ್ನು ಪಡೆಯಬಹುದು.
  • ಪ್ರತಿಯೊಂದು ನೋಂದಾಯಿತ ಪತ್ರದ ಮೇಲೆ 3.00 ರೂ. ಮತ್ತು 200 ರೂ. ಕ್ಕಿಂತ ಹೆಚ್ಚಿನ ಮೌಲ್ಯದ ಮನಿ ಆರ್ಡರ್‌ಗಳ ಮೇಲೆ 5.00 ರೂ. ರಷ್ಟು ಕಮಿಷನ್ ನಿಗದಿಪಡಿಸಲಾಗಿದೆ.
  • ಅಂಚೆ ಚೀಟಿಗಳು ಮತ್ತು ಸ್ಟೇಷನರಿ ಸಾಮಗ್ರಿಗಳ ಮಾರಾಟದ ಮೇಲೆ ಒಟ್ಟು ಮೊತ್ತದ 5% ರಷ್ಟು ಲಾಭಾಂಶ ದೊರೆಯುತ್ತದೆ.
  • ಎಲ್ಲಕ್ಕಿಂತ ಮುಖ್ಯವಾಗಿ, ಉತ್ತಮ ಪ್ರದರ್ಶನ ನೀಡುವ ಫ್ರಾಂಚೈಸಿಗಳಿಗೆ ಅವರ ಒಟ್ಟು ಗಳಿಕೆಯ ಮೇಲೆ 25% ರಿಂದ 30% ರಷ್ಟು ಹೆಚ್ಚುವರಿ ಪ್ರೋತ್ಸಾಹಧನವನ್ನುನೀಡಲಾಗುತ್ತದೆ.

ನೀಡಬಹುದಾದ ಸೇವೆಗಳು

  • ಸ್ಪೀಡ್ ಪೋಸ್ಟ್ ಮತ್ತು ರಿಜಿಸ್ಟರ್ಡ್ ಪೋಸ್ಟ್ ಬುಕಿಂಗ್.
  • ಅಂಚೆ ಚೀಟಿಗಳು ಮತ್ತು ಲೇಖನ ಸಾಮಗ್ರಿಗಳ ಮಾರಾಟ.
  • ಅಂತಾರಾಷ್ಟ್ರೀಯ ಪಾರ್ಸೆಲ್ ಸೇವೆಗಳು.
  • ಕ್ಯಾಶ್ ಆನ್ ಡೆಲಿವರಿ ಸೌಲಭ್ಯ.
  • ಇ-ಕಾಮರ್ಸ್ ಪಾರ್ಸೆಲ್ ಪಿಕಪ್ ಮತ್ತು ವಿತರಣೆ.
  • ಡಿಜಿಟಲ್ ವ್ಯಾಲೆಟ್ ಪಾವತಿ ಮತ್ತು ರಿಯಲ್-ಟೈಮ್ ಟ್ರ್ಯಾಕಿಂಗ್.

ಅರ್ಜಿ ಸಲ್ಲಿಸುವುದು ಹೇಗೆ?

  • ಈ ಯೋಜನೆಯ ಅರ್ಜಿ ಪ್ರಕ್ರಿಯೆಯು ಪ್ರಮುಖವಾಗಿ ನಿಮ್ಮ ಭಾಗದ ಅಂಚೆ ವಿಭಾಗೀಯ ಹಂತದಲ್ಲಿ ನಡೆಯುತ್ತದೆ.
  • ಮೊದಲಿಗೆ, ನೀವು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್‌ indiapost.gov.in/ ನಿಂದ 'Form A' ಅನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು ಅಥವಾ ನಿಮ್ಮ ಹತ್ತಿರದ ಅಂಚೆ ವಿಭಾಗೀಯ ಕಚೇರಿಗೆ ಭೇಟಿ ನೀಡಿ ಫಾರ್ಮ್ ಪಡೆಯಬಹುದು.
  • ಅರ್ಜಿಯೊಂದಿಗೆ ನೀವು ಒಂದು ವಿವರವಾದ ವ್ಯಾಪಾರ ಯೋಜನೆಯನ್ನು ಸಿದ್ಧಪಡಿಸಬೇಕು; ಇದರಲ್ಲಿ ನೀವು ಫ್ರಾಂಚೈಸಿಯನ್ನು ಹೇಗೆ ನಡೆಸುತ್ತೀರಿ ಮತ್ತು ಮಾಸಿಕ ಕನಿಷ್ಠ 50,000 ರೂ. ವಹಿವಾಟಿನ ಗುರಿಯನ್ನು ಹೇಗೆ ತಲುಪುತ್ತೀರಿ ಎಂಬುದನ್ನು ವಿವರಿಸಿರಬೇಕು.
  • ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿ ನಮೂನೆಯ ಜೊತೆಗೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಶೈಕ್ಷಣಿಕ ದಾಖಲೆಗಳು ಮತ್ತು ಮಳಿಗೆಯ ಮಾಲೀಕತ್ವ ಅಥವಾ ಬಾಡಿಗೆ ಒಪ್ಪಂದದ ಪತ್ರಗಳನ್ನು ಲಗತ್ತಿಸಿ ವಿಭಾಗೀಯ ಕಚೇರಿಗೆ ಸಲ್ಲಿಸಬೇಕು.
  • ನೀವು ಅರ್ಜಿ ಸಲ್ಲಿಸಿದ ನಂತರ, ಅಂಚೆ ಇಲಾಖೆಯ ಅಧಿಕಾರಿಗಳು 14 ದಿನಗಳ ಒಳಗಾಗಿ ನಿಮ್ಮ ಮಳಿಗೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ.
  • ನಿಮ್ಮ ಅರ್ಜಿ ಮತ್ತು ಸ್ಥಳ ಪರಿಶೀಲನೆ ಯಶಸ್ವಿಯಾದ ನಂತರ, ನೀವು ಇಲಾಖೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಬೇಕು ಮತ್ತು ನಿಗದಿತ ಭದ್ರತಾ ಠೇವಣಿಯನ್ನು ಪಾವತಿಸಿ ನಿಮ್ಮ ಅಂಚೆ ಸೇವಾ ಕೇಂದ್ರವನ್ನು ಪ್ರಾರಂಭಿಸಬಹುದು.

(ನಿರಾಮಯ ಆರೋಗ್ಯ ವಿಮಾ ಯೋಜನೆ)

ಅಗತ್ಯವಿರುವ ದಾಖಲೆಗಳೇನು?

  • ವಯಸ್ಸಿನ ಪುರಾವೆ: ಅರ್ಜಿದಾರರು ತಮ್ಮ ವಯಸ್ಸನ್ನು ದೃಢೀಕರಿಸಲು ಜನ್ಮ ಪ್ರಮಾಣಪತ್ರ ಅಥವಾ ಶಾಲಾ ವರ್ಗಾವಣೆ ಪ್ರಮಾಣಪತ್ರವನ್ನು ಸಲ್ಲಿಸಬೇಕು.
  • ಗುರುತಿನ ಚೀಟಿ: ಅರ್ಜಿದಾರರ ಅಧಿಕೃತ ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್ ನೀಡುವುದು ಕಡ್ಡಾಯವಾಗಿದೆ.
  • ವಿಳಾಸದ ಪುರಾವೆ: ಅರ್ಜಿದಾರರ ವೈಯಕ್ತಿಕ ವಾಸಸ್ಥಳದ ವಿಳಾಸ ಮತ್ತು ಫ್ರಾಂಚೈಸಿ ನಡೆಸಲು ಉದ್ದೇಶಿಸಿರುವ ವ್ಯವಹಾರದ ಸ್ಥಳದ ವಿಳಾಸಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಬೇಕು.
  • ಶೈಕ್ಷಣಿಕ ಅರ್ಹತೆ: ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸಾಗಿರುವುದಕ್ಕೆ ಪೂರಕವಾಗಿ ಸಂಬಂಧಿಸಿದ ಶೈಕ್ಷಣಿಕ ಅಂಕಪಟ್ಟಿ ಅಥವಾ ಪ್ರಮಾಣಪತ್ರಗಳನ್ನು ಸಲ್ಲಿಸಬೇಕು.
  • ಆಸ್ತಿ ದಾಖಲೆಗಳು: ಫ್ರಾಂಚೈಸಿ ನಡೆಸುವ ಸ್ಥಳವು ಸ್ವಂತದ್ದಾಗಿದ್ದರೆ ಅದರ ಮಾಲೀಕತ್ವದ ಪತ್ರ ಅಥವಾ ಬಾಡಿಗೆಗೆ ಪಡೆದ ಸ್ಥಳವಾಗಿದ್ದರೆ ಅಧಿಕೃತ ಬಾಡಿಗೆ ಒಪ್ಪಂದದ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.

For more such information, join our WhatsApp Channel- whatsapp.com/channel/0029Va

]]>
Wed, 07 Jan 2026 07:10:18 +0530 shivuagrico
Kuri sakanike&20 ಕುರಿ+1ಟಗರು ಸಾಕಾಣಿಕೆಗೆ 43,750 ರೂಪಾಯಿ ರೈತರ ಖಾತೆಗೆ ನೇರ ಜಮಾ https://krushirushi.in/Kuri-sakanike-2375 https://krushirushi.in/Kuri-sakanike-2375 Kuri sakanike-ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ: ಕುರಿ ಸಾಕಾಣಿಕೆಗೆ 43,750 ರೂಪಾಯಿ ರೈತರ ಖಾತೆಗೆ ನೇರ ಜಮಾ

ಕುರಿ ಸಾಕಾಣಿಕೆ ಈಗ ಲಾಭದಾಯಕ ಉದ್ಯಮವಾಗಿದೆ. ಕುರಿ ಸಾಕಣೆ ಮಾಡುವ ಯುವಕರನ್ನು ಪ್ರೋತ್ಸಾಹಿಸಲು ಕರ್ನಾಟಕ ಸರ್ಕಾರ 'ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ' ಜಾರಿಗೆ ತಂದಿದೆ. ಈ ಯೋಜನೆಯಡಿ 20 ಕುರಿ/ಮೇಕೆ ಮತ್ತು 1 ಟಗರು/ಹೋತದ ಘಟಕ ನೀಡಲಾಗುತ್ತದೆ. ಒಟ್ಟು 1,75,000 ರೂ. ವೆಚ್ಚದಲ್ಲಿ 50% ಸಾಲ, 25% ಸಹಾಯಧನ, 25% ಫಲಾನುಭವಿ ವಂತಿಕೆ ಇರುತ್ತದೆ. ಗ್ರಾಮೀಣ ಯುವಕರಿಗೆ ಉದ್ಯೋಗಾವಕಾಶ ನೀಡಲು ಇದು ಸಹಕಾರಿ. ಈ ಯೋಜನೆಯ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಿಂದೊಮ್ಮೆ ಒಂದು ಸಮುದಾಯಕ್ಕಷ್ಟೇ ಸೀಮಿತವಾಗಿದ್ದ ಕುರಿ ಸಾಕಾಣಿಕೆಯು ಇಂದು ಒಂದು ವೃತ್ತಿಪರ ಉದ್ಯೋಗವಾಗಿ ಮಾರ್ಪಾಟ್ಟಿದೆ. ಹೆಚ್ಚಿನ ಯುವಕರು ಕುರಿ ಸಾಕಾಣಿಕೆಯತ್ತ ಆಕರ್ಷಿತರಾಗುತ್ತಿದ್ದಾರೆ. ಕರ್ನಾಟಕ ಸರ್ಕಾರವು ರಾಜ್ಯದ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಜೀವನಮಟ್ಟವನ್ನು ಸುಧಾರಿಸಲು ಮತ್ತು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ' ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆರ್ಥಿಕವಾಗಿ ಹಿಂದುಳಿದ ಸದಸ್ಯರಿಗೆ ಸುಸ್ಥಿರ ಜೀವನೋಪಾಯವನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಏನಿದು ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ?

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯು ಕರ್ನಾಟಕ ಸರ್ಕಾರದ ಪಶುಸಂಗೋಪನಾ ಇಲಾಖೆಯ ಒಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ರಾಜ್ಯದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆರ್ಥಿಕವಾಗಿ ಹಿಂದುಳಿದ ಸದಸ್ಯರಿಗೆ ಸುಸ್ಥಿರ ಜೀವನೋಪಾಯವನ್ನು ಕಲ್ಪಿಸುವ ಉದ್ದೇಶ ಹೊಂದಿದೆ. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ಒಟ್ಟು 1,75,000 ರೂ.ವೆಚ್ಚದಲ್ಲಿ 20 ಕುರಿ/ಮೇಕೆ ಮತ್ತು 1 ಟಗರು/ಹೋತವನ್ನೊಳಗೊಂಡ (20+1) ಘಟಕವನ್ನು ನೀಡಲಾಗುತ್ತದೆ. ಈ ಮೊತ್ತದಲ್ಲಿ ಶೇ. 50 ರಷ್ಟು ಎನ್.ಸಿ.ಡಿ.ಸಿ ವತಿಯಿಂದ ಸಾಲ, ಶೇ. 25 ರಷ್ಟು ರಾಜ್ಯ ಸರ್ಕಾರದ ಸಹಾಯಧನ ಮತ್ತು ಉಳಿದ ಶೇ. 25 ರಷ್ಟು ಫಲಾನುಭವಿಯ ವಂತಿಕೆಯಾಗಿರುತ್ತದೆ.

 

ಯೋಜನೆಯ ಪ್ರಮುಖ ಅಂಶಗಳು

  • ಆರ್ಥಿಕ ನೆರವು ಮತ್ತು ಘಟಕಗಳ ಸ್ಥಾಪನೆ;ರಾಜ್ಯದ ಕುರಿಗಾಹಿಗಳ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರವು ಹೊಸ ಕುರಿ ಸಾಕಾಣಿಕೆ ಘಟಕಗಳನ್ನು ಸ್ಥಾಪಿಸಲು ಗಣನೀಯ ಪ್ರಮಾಣದ ಹಣಕಾಸಿನ ನೆರವು ನೀಡುತ್ತದೆ. ಈ ಯೋಜನೆಯಡಿ, ಕುರಿಗಾಹಿಗಳು ತಮ್ಮ ಅಸ್ತಿತ್ವದಲ್ಲಿರುವ ಸಾಕಾಣಿಕೆ ಕೇಂದ್ರಗಳನ್ನು ವಿಸ್ತರಿಸಲು ಅಥವಾ ಹೊಸದಾಗಿ 20 ಕುರಿ ಹಾಗೂ 1 ಟಗರು ಒಳಗೊಂಡ ಘಟಕಗಳನ್ನು ಪ್ರಾರಂಭಿಸಲು ಬ್ಯಾಂಕ್‌ಗಳ ಮೂಲಕ ಸಾಲ ಮತ್ತು ಸರ್ಕಾರದ ಮೂಲಕ ಸಬ್ಸಿಡಿ (ಸಹಾಯಧನ) ಪಡೆಯಬಹುದು.
  • ಗ್ರಾಮೀಣ ಸ್ವಯಂ ಉದ್ಯೋಗ ಮತ್ತು ಸ್ವಾವಲಂಬನೆ; ಗ್ರಾಮೀಣ ಭಾಗದ ಯುವಕರು ಮತ್ತು ಸಾಂಪ್ರದಾಯಿಕ ಕುರಿಗಾಹಿ ಕುಟುಂಬಗಳು ಉದ್ಯೋಗಕ್ಕಾಗಿ ನಗರಗಳಿಗೆ ವಲಸೆ ಹೋಗುವುದನ್ನು ತಡೆಯುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಕುರಿ ಸಾಕಾಣಿಕೆಯನ್ನು ಲಾಭದಾಯಕ ಉದ್ದಿಮೆಯನ್ನಾಗಿ ಪರಿವರ್ತಿಸುವ ಮೂಲಕ, ಗ್ರಾಮೀಣ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶಗಳನ್ನು ಒದಗಿಸಿ, ಅವರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಇದು ಉತ್ತೇಜನ ನೀಡುತ್ತದೆ.
  • ಮಾಂಸ ಮತ್ತು ಉಣ್ಣೆ ಉತ್ಪಾದನೆ ವೃದ್ಧಿ; ರಾಜ್ಯದ ಕೃಷಿ ಆಧಾರಿತ ಆರ್ಥಿಕತೆಯನ್ನು ಬಲಪಡಿಸಲು ಮಾಂಸ ಮತ್ತು ಉಣ್ಣೆಯ ಉತ್ಪಾದನೆಯನ್ನು ಹೆಚ್ಚಿಸುವುದು ಅತ್ಯಗತ್ಯವಾಗಿದೆ. ವೈಜ್ಞಾನಿಕ ಹೈನುಗಾರಿಕೆ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಗುಣಮಟ್ಟದ ಮಾಂಸವನ್ನು ಉತ್ಪಾದಿಸಿ ಮಾರುಕಟ್ಟೆಗೆ ಪೂರೈಸಲು ಈ ಯೋಜನೆ ಸಹಕಾರಿಯಾಗಿದೆ. ಇದು ಕೇವಲ ಕುರಿಗಾಹಿಗಳ ಆದಾಯವನ್ನು ಹೆಚ್ಚಿಸುವುದಲ್ಲದೆ, ರಾಜ್ಯದ ಒಟ್ಟು ಜಿಡಿಪಿಗೆ ಪಶುಸಂಗೋಪನಾ ವಲಯದಿಂದ ಹೆಚ್ಚಿನ ಕೊಡುಗೆ ನೀಡುವಂತೆ ಮಾಡುತ್ತದೆ.

ಯೋಜನೆಯಡಿ ದೊರೆಯುವ ಆರ್ಥಿಕ ನೆರವು ಎಷ್ಟು?

  • ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮದ ಸಾಲ: ಒಟ್ಟು ಘಟಕ ವೆಚ್ಚದ ಶೇಕಡಾ 50 ರಷ್ಟು ಭಾಗ ಅಂದರೆ 87,500 ರೂ. ಹಣವನ್ನು ಎನ್‌ಸಿಡಿಸಿ ಮೂಲಕ ಸಾಲದ ರೂಪದಲ್ಲಿ ನೀಡಲಾಗುತ್ತದೆ. ಈ ಮೊತ್ತವನ್ನು ಫಲಾನುಭವಿಯು ನಿಗದಿತ ಅವಧಿಯಲ್ಲಿ ಮರುಪಾವತಿ ಮಾಡಬೇಕಿರುತ್ತದೆ.
  • ಸರ್ಕಾರದ ಸಹಾಯಧನ : ಕುರಿಗಾಹಿಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಕರ್ನಾಟಕ ಸರ್ಕಾರವು ಒಟ್ಟು ವೆಚ್ಚದ ಶೇಕಡಾ 25 ರಷ್ಟು ಮೊತ್ತವನ್ನು ಸಹಾಯಧನದ ರೂಪದಲ್ಲಿ ನೀಡುತ್ತದೆ. ಅಂದರೆ 43,750 ರೂ. ಹಣವು ಉಚಿತ ಸಹಾಯಧನವಾಗಿದ್ದು, ಇದನ್ನು ಮರುಪಾವತಿ ಮಾಡುವ ಅಗತ್ಯವಿರುವುದಿಲ್ಲ.
  • ಫಲಾನುಭವಿಯ ವಂತಿಕೆ: ಯೋಜನೆಯಲ್ಲಿ ಫಲಾನುಭವಿಯ ಪಾಲುದಾರಿಕೆಯನ್ನು ಖಚಿತಪಡಿಸಿಕೊಳ್ಳಲು, ಒಟ್ಟು ವೆಚ್ಚದ ಶೇಕಡಾ 25 ರಷ್ಟು ಭಾಗ ಅಂದರೆ 43,750 ರೂ. ಹಣವನ್ನು ಸ್ವತಃ ಅರ್ಜಿದಾರರೇ ಭರಿಸಬೇಕಾಗುತ್ತದೆ.

ಘಟಕದ ರಚನೆ ಮತ್ತು ಸ್ವರೂಪ ಹೇಗಿರಬೇಕು?

ಈ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಒಂದು ಸಣ್ಣ ಪ್ರಮಾಣದ ಕುರಿ ಅಥವಾ ಮೇಕೆ ಸಾಕಾಣಿಕೆ ಘಟಕವನ್ನು ಮಂಜೂರು ಮಾಡಲಾಗುತ್ತದೆ. ಈ ಘಟಕವು ಒಟ್ಟು 21 ಪ್ರಾಣಿಗಳನ್ನು ಒಳಗೊಂಡಿರುತ್ತದೆ, ಅದರಲ್ಲಿ 20 ಹೆಣ್ಣು ಕುರಿ/ಮೇಕೆಗಳು ಮತ್ತು ಸಂತಾನೋತ್ಪತ್ತಿಗಾಗಿ 1 ಗಂಡು ಟಗರು ಅಥವಾ ಹೋತವನ್ನು ನೀಡಲಾಗುತ್ತದೆ. ಇದನ್ನು ವೈಜ್ಞಾನಿಕವಾಗಿ ಒಂದು ಲಾಭದಾಯಕ ಸಾಕಾಣಿಕಾ ಘಟಕವೆಂದು ಪರಿಗಣಿಸಲಾಗುತ್ತದೆ.

ಒಟ್ಟು ವೆಚ್ಚದ ವಿವರ

ಒಂದು ಪೂರ್ಣ ಪ್ರಮಾಣದ ಘಟಕವನ್ನು ಸ್ಥಾಪಿಸಲು ತಗಲುವ ಒಟ್ಟು ಮೊತ್ತವನ್ನು 1,75,000 ರೂ. (ಒಂದು ಲಕ್ಷದ ಎಪ್ಪತ್ತೈದು ಸಾವಿರ ರೂಪಾಯಿಗಳು) ಎಂದು ನಿಗದಿಪಡಿಸಲಾಗಿದೆ. ಈ ಮೊತ್ತವು ಪ್ರಾಣಿಗಳ ಖರೀದಿ ಮತ್ತು ಇತರ ಪ್ರಾರಂಭಿಕ ವೆಚ್ಚಗಳನ್ನು ಒಳಗೊಂಡಿರುತ್ತದೆ.

ಅರ್ಹತಾ ಮಾನದಂಡಗಳೇನು?

  • ಈ ಯೋಜನೆಯ ಲಾಭ ಪಡೆಯಲು ಅರ್ಜಿದಾರರು ಕಡ್ಡಾಯವಾಗಿ ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  • ಅರ್ಜಿದಾರರು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು, ಅಂದರೆ ವಯಸ್ಕರಾಗಿರಬೇಕು.
  • ಕುರಿಗಾಹಿ ವೃತ್ತಿಯಲ್ಲಿ ತೊಡಗಿಸಿಕೊಂಡಿರಬೇಕು. ಇದು ಕುರುಬ ಸಮುದಾಯದವರು ಅಥವಾ ಸಕ್ರಿಯವಾಗಿ ಕುರಿ ಸಾಕಾಣಿಕೆಯನ್ನು ವೃತ್ತಿಯನ್ನಾಗಿ ಮಾಡಿಕೊಂಡಿರುವವರಿಗೆ ಅನ್ವಯಿಸುತ್ತದೆ.

ಸಂಘಟನೆ ಮತ್ತು ತಾಂತ್ರಿಕ ನೋಂದಣಿ

  • ಫಲಾನುಭವಿಯು ಸ್ಥಳೀಯ ಅಥವಾ ಜಿಲ್ಲಾ ಮಟ್ಟದ 'ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘ'ದ ಕಡ್ಡಾಯ ಸದಸ್ಯರಾಗಿರಬೇಕು. ಸದಸ್ಯರಲ್ಲದವರಿಗೆ ಈ ಯೋಜನೆಯಡಿ ಸೌಲಭ್ಯ ಸಿಗುವುದಿಲ್ಲ.
  • ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅರ್ಜಿದಾರರು ಕೃಷಿ ಇಲಾಖೆಯ ಫ್ರೂಟ್ಸ್ (FRUITS) ಪೋರ್ಟಲ್‌ fruits.karnataka.gov.in/ ನಲ್ಲಿ ನೋಂದಾಯಿಸಿಕೊಂಡಿರಬೇಕು. ಇದರೊಂದಿಗೆ, ಮಾರಾಟ ಪ್ರಕ್ರಿಯೆಗಾಗಿ NeML (National E-Market Limited) ಆನ್‌ಲೈನ್ ಮಾರ್ಕೆಟಿಂಗ್ ಪ್ಲಾಟ್‌ಫಾರ್ಮ್‌ನಲ್ಲಿಯೂ ಹೆಸರು ನೋಂದಾಯಿಸಿರುವುದು ಅತ್ಯಗತ್ಯ.

ಪ್ರಮುಖ ಷರತ್ತುಗಳು ಏನೇನು?

  • ಕುರಿ ಅಥವಾ ಮೇಕೆಗಳನ್ನು ವೈಜ್ಞಾನಿಕವಾಗಿ ಸಾಕಲು ಅರ್ಜಿದಾರರ ಬಳಿ ಕನಿಷ್ಠ 1000 ಚದರ ಅಡಿಗಳಷ್ಟು ಸ್ವಂತ ಜಾಗ ಲಭ್ಯವಿರಬೇಕು. ಪ್ರಾಣಿಗಳ ವಾಸಸ್ಥಳ ಮತ್ತು ನಿರ್ವಹಣೆಗೆ ಇದು ಅವಶ್ಯಕ.
  • ಯೋಜನೆಯ ಲಾಭವು ಹೆಚ್ಚಿನ ಕುಟುಂಬಗಳಿಗೆ ತಲುಪಲಿ ಎಂಬ ಉದ್ದೇಶದಿಂದ, ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಅರ್ಜಿದಾರರು ಕಳೆದ 3 ವರ್ಷಗಳಲ್ಲಿ ಪಶುಸಂಗೋಪನಾ ಇಲಾಖೆಯ ಯಾವುದೇ ಯೋಜನೆಗಳ ಅಡಿಯಲ್ಲಿ ಯಾವುದೇ ರೀತಿಯ ಆರ್ಥಿಕ ನೆರವು ಅಥವಾ ಸಹಾಯಧನವನ್ನು ಪಡೆದಿರಬಾರದು. ಒಂದು ವೇಳೆ ಈ ಹಿಂದೆ ನೆರವು ಪಡೆದಿದ್ದಲ್ಲಿ, ಅವರು ಈ ಯೋಜನೆಗೆ ಅನರ್ಹರಾಗುತ್ತಾರೆ.

ಯೋಜನೆಯ ಪ್ರಸ್ತುತ ಸ್ಥಿತಿ ಏನು?

ಪ್ರಸ್ತುತ 2026ರ ಆರಂಭದ ಮಾಹಿತಿಯಂತೆ, ಈ ಯೋಜನೆಯು ರಾಜ್ಯಾದ್ಯಂತ ಜಾರಿಯಲ್ಲಿದ್ದರೂ ಕೆಲವು ಜಿಲ್ಲೆಗಳಲ್ಲಿ ಅನುದಾನದ ಬಿಡುಗಡೆ ವಿಳಂಬವಾಗಿರುವ ವರದಿಗಳಿವೆ. ಕಳೆದ ವರ್ಷಗಳಲ್ಲಿ ಸಾವಿರಾರು ರೈತರು ಇದರ ಲಾಭ ಪಡೆದಿದ್ದಾರೆ. ಪ್ರಸ್ತುತ ಸಾಲಿನ ಹೊಸ ಅರ್ಜಿ ಸಲ್ಲಿಕೆ ಮತ್ತು ಅನುದಾನದ ಲಭ್ಯತೆಯ ಬಗ್ಗೆ ಮಾಹಿತಿ ಪಡೆಯಲು ರೈತರು ತಕ್ಷಣವೇ ತಮ್ಮ ಜಿಲ್ಲಾ ಪಶುಸಂಗೋಪನಾ ಕಚೇರಿಯನ್ನು ಸಂಪರ್ಕಿಸುವುದು ಸೂಕ್ತ.

ಅರ್ಜಿ ಸಲ್ಲಿಸುವುದು ಹೇಗೆ?

  • ಯೋಜನೆಯ ಲಾಭ ಪಡೆಯಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯ ತಾಲ್ಲೂಕು ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಕಚೇರಿಗೆ ಅಥವಾ ಸಹಾಯಕ ನಿರ್ದೇಶಕರ ಕಚೇರಿಗೆ ಖುದ್ದಾಗಿ ಭೇಟಿ ನೀಡಬೇಕು. ಅಲ್ಲಿ ಇಲಾಖೆಯು ನಿಗದಿಪಡಿಸಿದ ಅಧಿಕೃತ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.
  • ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಸ್ಥಳೀಯ ಕಚೇರಿಗೆ ಸಲ್ಲಿಸಬೇಕು.



ಫಲಾನುಭವಿಗಳ ಆಯ್ಕೆ ಹೇಗೆ?

ಸಲ್ಲಿಸಲಾದ ಅರ್ಜಿಗಳನ್ನು ಪರಿಶೀಲಿಸಲು ಜಿಲ್ಲಾ ಮಟ್ಟದಲ್ಲಿ ಒಂದು ಅಧಿಕೃತ ಸಮಿತಿಯನ್ನು ರಚಿಸಲಾಗಿರುತ್ತದೆ. ಈ ಸಮಿತಿಯು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ ಪಶುಸಂಗೋಪನಾ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕರು ಮತ್ತು ಲೀಡ್ ಬ್ಯಾಂಕ್ ಮ್ಯಾನೇಜರ್‌ಗಳು ಸದಸ್ಯರಾಗಿರುತ್ತಾರೆ. ಈ ಸಮಿತಿಯು ಅರ್ಜಿದಾರರ ಅರ್ಹತೆ ಮತ್ತು ಲಭ್ಯವಿರುವ ಗುರಿಯ ಆಧಾರದ ಮೇಲೆ ಅಂತಿಮವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡುತ್ತದೆ.


ಅಗತ್ಯವಿರುವ ದಾಖಲೆಗಳು

  • ಆಧಾರ್ ಕಾರ್ಡ್/ಗುರುತಿನ ಚೀಟಿ
  • ಪಡಿತರ ಚೀಟಿ
  • ಬ್ಯಾಂಕ್ ಪಾಸ್‌ಬುಕ್ ಪ್ರತಿ
  • ಇತ್ತೀಚಿನ ಭಾವಚಿತ್ರ
  • ಜಾತಿ ಪ್ರಮಾಣಪತ್ರ (ಅಗತ್ಯವಿದ್ದಲ್ಲಿ)
  • ಸಹಕಾರಿ ಸಂಘದ ಸದಸ್ಯತ್ವದ ಪುರಾವೆ

 

]]>
Tue, 06 Jan 2026 15:20:04 +0530 shivuagrico
Maize support price&ಮೆಕ್ಕೆಜೋಳ ಬೆಳೆಗಾರರಿಗಾಗಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ; ಬೆಲೆ ಕುಸಿತಕ್ಕೆ ಬ್ರೇಕ್ https://krushirushi.in/Maize-support-price-2374 https://krushirushi.in/Maize-support-price-2374 Maize support price-ಮೆಕ್ಕೆಜೋಳ ಬೆಳೆಗಾರರಿಗಾಗಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ; ಬೆಲೆ ಕುಸಿತಕ್ಕೆ ಬ್ರೇಕ್

ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಖಾರಿಫ್ ಹಂಗಾಮಿನ ಮೆಕ್ಕೆಜೋಳ ಬೆಳೆಗಾರರಿಗಾಗಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯನ್ನು ಜಾರಿಗೆ ತಂದಿದೆ. ದಾಖಲೆ ಪ್ರಮಾಣದ ಉತ್ಪಾದನೆಯಿಂದ ಬೆಲೆ ಕುಸಿತ ಎದುರಿಸುತ್ತಿರುವ ರೈತರಿಗೆ ಪ್ರತಿ ಕ್ವಿಂಟಾಲ್‌ಗೆ 2,150 ರೂ. ನಿಗದಿತ ದರ ನಿಗದಿಪಡಿಸಲಾಗಿದೆ. ಮಾರುಕಟ್ಟೆ ದರ 1,900 ರೂ.ಗಿಂತ ಕಡಿಮೆಯಾದರೆ 250 ರೂ.ವರೆಗೆ ಬೆಲೆ ವ್ಯತ್ಯಾಸ ಪರಿಹಾರ ಧನ ದೊರೆಯಲಿದೆ. ಈ ಯೋಜನೆಯಿಂದ 10 ಲಕ್ಷಕ್ಕೂ ಹೆಚ್ಚು ರೈತರು ಪ್ರಯೋಜನ ಪಡೆಯಲಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.

ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಖಾರಿಫ್ ಹಂಗಾಮಿನ ಮೆಕ್ಕೆಜೋಳ ಬೆಳೆಗಾರರಿಗೆ ನೆರವಾಗಲು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯನ್ನು ಜಾರಿಗೊಳಿಸಿದೆ. ರಾಜ್ಯದಲ್ಲಿ ಈ ಬಾರಿ ದಾಖಲೆ ಪ್ರಮಾಣದ ಮೆಕ್ಕೆಜೋಳ ಉತ್ಪಾದನೆಯಾಗಿದ್ದು, ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರಿಗೆ ಈ ಯೋಜನೆ ಆಸರೆಯಾಗಲಿದೆ. ಈ ಯೋಜನೆಯಿಂದ ರಾಜ್ಯದಲ್ಲಿನ 10 ಲಕ್ಷಕ್ಕೂ ಹೆಚ್ಚಿನ ಮೆಕ್ಕೆಜೋಳ ಬೆಳೆಗಾರರಿಗೆ ಅನುಕೂಲವಾಗಲಿದೆ. ರಾಜ್ಯದ ಮೆಕ್ಕೆಜೋಳ ಬೆಳೆಗಾರರು ಎದುರಿಸುತ್ತಿರುವ 'ಬೆಲೆ ಕುಸಿತ' ಮತ್ತು 'ಸಂಕಷ್ಟದ ಮಾರಾಟ'ವನ್ನು ತಡೆಯಲು ಸರ್ಕಾರವು ಪ್ರತಿ ಕ್ವಿಂಟಾಲ್‌ಗೆ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆಯನ್ನು ನಿಗದಿಪಡಿಸಿದೆ.

ಏನಿದು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ?

ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಖಾರಿಫ್ ಹಂಗಾಮಿನ ಮೆಕ್ಕೆಜೋಳ ಬೆಳೆಗಾರರಿಗೆ ನೆರವಾಗಲು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ ಜಾರಿಗೆ ತಂದಿದ್ದು, ಪ್ರತಿ ಕ್ವಿಂಟಾಲ್‌ಗೆ 2,150 ರೂ. ನಿಗದಿತ ದರ ನಿಗದಿಪಡಿಸಿದೆ. ಮಾರುಕಟ್ಟೆ ದರವು 1,900 ರೂ. ಅಥವಾ ಅದಕ್ಕಿಂತ ಕಡಿಮೆಯಾದಲ್ಲಿ ರೈತರಿಗೆ ಪ್ರತಿ ಕ್ವಿಂಟಾಲ್‌ಗೆ 250 ರೂ.ವರೆಗೆ ಬೆಲೆ ವ್ಯತ್ಯಾಸದ ಪರಿಹಾರ ಧನ ದೊರೆಯಲಿದೆ. ಮಾರುಕಟ್ಟೆ ಬೆಲೆ ಏರಿಕೆಯಾದಂತೆ ಈ ಪರಿಹಾರದ ಮೊತ್ತವು ಕಡಿಮೆಯಾಗುತ್ತಾ ಹೋಗುತ್ತದೆ ಮತ್ತು ನಿಗದಿತ ಬೆಲೆಯನ್ನು ತಲುಪಿದಾಗ ಸ್ಥಗಿತಗೊಳ್ಳುತ್ತದೆ. ಆದರೆ ರಾಜ್ಯದ ಸಾಮಾನ್ಯ ಸಂಗ್ರಹಣೆ ಯೋಜನೆಯಡಿ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ 2,400 ರೂ.ಕನಿಷ್ಠ ಬೆಂಬಲ ಬೆಲೆ ಲಭ್ಯವಿರುತ್ತದೆ. ಈ ಯೋಜನೆಯು ನಿಯೋಜಿತ ಎಪಿಎಂಸಿ ಮತ್ತು ಉಪ-ಮಾರುಕಟ್ಟೆ ಯಾರ್ಡ್‌ಗಳಲ್ಲಿ ಏಕೀಕೃತ ಮಾರುಕಟ್ಟೆ ವೇದಿಕೆ ಮೂಲಕ ಮಾರಾಟವಾಗುವ ಗರಿಷ್ಠ ನಾಲ್ಕು ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಒಳಗೊಳ್ಳಲಿದ್ದು, ಪ್ರತಿ ರೈತರಿಗೆ ಗರಿಷ್ಠ 50 ಕ್ವಿಂಟಾಲ್ ಅಥವಾ ಪ್ರತಿ ಎಕರೆಗೆ ಗರಿಷ್ಠ 12 ಕ್ವಿಂಟಾಲ್ ಮಿತಿಯವರೆಗೆ ಮಾತ್ರ ಸೌಲಭ್ಯ ಸಿಗಲಿದೆ. ಕಡ್ಡಾಯ ಗುಣಮಟ್ಟದ ತಪಾಸಣೆ ಮತ್ತು ದಾಖಲೆಗಳ ಪರಿಶೀಲನೆಯ ನಂತರ ಪರಿಹಾರದ ಮೊತ್ತವನ್ನು ನೇರ ನಗದು ವರ್ಗಾವಣೆ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.

 

ಬೆಲೆ ಮತ್ತು ಪರಿಹಾರದ ವಿವರಗಳು

  • ಪ್ರಸ್ತುತ ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ ಬೆಲೆಯು ಪ್ರತಿ ಕ್ವಿಂಟಾಲ್‌ಗೆ 1,600 ರೂ. ದಿಂದ 2,000 ರೂ. ರಷ್ಟಿದ್ದು, ಇದು ರೈತರಿಗೆ ಆರ್ಥಿಕ ನಷ್ಟ ಉಂಟುಮಾಡುತ್ತಿದೆ.
  • ಈ ನಷ್ಟವನ್ನು ಸರಿದೂಗಿಸಲು ಸರ್ಕಾರವು ಪ್ರತಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ ₹2,150 ರಂತೆ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆಯನ್ನು ನಿಗದಿಪಡಿಸಿದೆ.
  • ಮಾರುಕಟ್ಟೆಯ ಸರಾಸರಿ ಮಾದರಿ ಬೆಲೆಯು 1,900 ರೂ. ಅಥವಾ ಅದಕ್ಕಿಂತ ಕಡಿಮೆ ಇದ್ದಾಗ, ರೈತರಿಗೆ ಪ್ರತಿ ಕ್ವಿಂಟಾಲ್‌ಗೆ ಗರಿಷ್ಠ 250 ರೂ. ವರೆಗೆ ಬೆಲೆ ವ್ಯತ್ಯಾಸದ ಪರಿಹಾರವನ್ನು ನೀಡಲಾಗುತ್ತದೆ.
  • ಮಾರುಕಟ್ಟೆ ಬೆಲೆಯು 1,900 ರೂ. ಕ್ಕಿಂತ ಹೆಚ್ಚಾದಂತೆ ಪರಿಹಾರದ ಮೊತ್ತವು ಹಂತ-ಹಂತವಾಗಿ ಕಡಿಮೆಯಾಗುತ್ತಾ ಹೋಗುತ್ತದೆ.
  • ಒಂದು ವೇಳೆ ಮಾರುಕಟ್ಟೆ ಬೆಲೆಯು ನಿಗದಿತ ದರವಾದ 2,150 ರೂ. ಅಥವಾ ಅದಕ್ಕಿಂತ ಹೆಚ್ಚಿದ್ದರೆ, ಈ ಯೋಜನೆಯಡಿ ಯಾವುದೇ ಪರಿಹಾರ ಅನ್ವಯಿಸುವುದಿಲ್ಲ.
  • ಅರ್ಹ ರೈತರಿಗೆ ಸಿಗಬೇಕಾದ ಈ ಬೆಲೆ ವ್ಯತ್ಯಾಸದ ಮೊತ್ತವನ್ನು ನೇರ ನಗದು ವರ್ಗಾವಣೆ ಮೂಲಕ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.

ಪ್ರಸ್ತುತ ಮಾರುಕಟ್ಟೆ ಸ್ಥಿತಿಗತಿ ಏನು?

  • ಕರ್ನಾಟಕ ರಾಜ್ಯದಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಮೆಕ್ಕೆಜೋಳದ ಉತ್ಪಾದನೆಯಾಗಿದ್ದು, ಒಟ್ಟು 17.64 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಈ ಬೆಳೆಯನ್ನು ಬೆಳೆಯಲಾಗಿದೆ.
  • ಪ್ರಸಕ್ತ ಸಾಲಿನಲ್ಲಿ ಒಟ್ಟು ಮೆಕ್ಕೆಜೋಳದ ಉತ್ಪಾದನೆಯು 53.80 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಆಗಬಹುದು ಎಂದು ಅಂದಾಜಿಸಲಾಗಿದೆ.
  • 2025ರ ಆಗಸ್ಟ್‌ನಿಂದ ಡಿಸೆಂಬರ್ ತಿಂಗಳ ಅವಧಿಯಲ್ಲಿಯೇ ಸುಮಾರು 20.50 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಮೆಕ್ಕೆಜೋಳವು ವಿವಿಧ ಎಪಿಎಂಸಿ ಮಾರುಕಟ್ಟೆಗಳಿಗೆ ಬಂದಿದೆ.
  • ಈ ಅವಧಿಯಲ್ಲಿ ಮಾರುಕಟ್ಟೆಗೆ ಬಂದಿರುವ ಮೆಕ್ಕೆಜೋಳದ ಪ್ರಮಾಣವು ರಾಜ್ಯದ ಒಟ್ಟು ಅಂದಾಜು ಉತ್ಪಾದನೆಯ ಶೇಕಡಾ 38ಕ್ಕಿಂತಲೂ ಅಧಿಕವಾಗಿದೆ.
  • ಉತ್ಪಾದನೆಯಲ್ಲಿನ ಈ ಭಾರಿ ಏರಿಕೆಯೇ ಮಾರುಕಟ್ಟೆಯಲ್ಲಿ ಬೆಲೆ ಕುಸಿತಕ್ಕೆ ಪ್ರಮುಖ ಕಾರಣವಾಗಿದ್ದು, ರೈತರು ಸಂಕಷ್ಟ ಎದುರಿಸುವಂತಾಗಿದೆ.
  • ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮೆಕ್ಕೆಜೋಳವನ್ನು ಬೆಳೆಯಲಾಗುತ್ತದೆಯಾದರೂ, ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಇದರ ಸಾಂದ್ರತೆ ಹೆಚ್ಚಾಗಿದೆ.
  • ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳು ಮೆಕ್ಕೆಜೋಳ ಬೆಳೆಯುವ ಪ್ರಮುಖ ಕೇಂದ್ರಗಳಾಗಿವೆ.
  • ಮಧ್ಯ ಮತ್ತು ದಕ್ಷಿಣ ಕರ್ನಾಟಕ ಭಾಗದಲ್ಲಿ ದಾವಣಗೆರೆ, ಹಾವೇರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಈ ಬೆಳೆಯನ್ನು ವ್ಯಾಪಕವಾಗಿ ಬೆಳೆಯಲಾಗುತ್ತದೆ.
  • ಅದರಲ್ಲೂ ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳು ರಾಜ್ಯದ ಪ್ರಮುಖ ಮೆಕ್ಕೆಜೋಳದ ಮಾರುಕಟ್ಟೆ ಕೇಂದ್ರಗಳಾಗಿ ಗುರುತಿಸಿಕೊಂಡಿವೆ.

ಯೋಜನೆಯ ಅರ್ಹತೆ ಮತ್ತು ಮಿತಿಗಳು

  • ಒಬ್ಬ ರೈತರು ಈ ಯೋಜನೆಯ ಮೂಲಕ ಗರಿಷ್ಠ 50 ಕ್ವಿಂಟಾಲ್‌ ಮೆಕ್ಕೆಜೋಳಕ್ಕೆ ಮಾತ್ರ ಬೆಲೆ ವ್ಯತ್ಯಾಸದ ಪರಿಹಾರವನ್ನು ಪಡೆಯಲು ಅವಕಾಶವಿದೆ.
  • ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ, ಪ್ರತಿ ಎಕರೆಗೆ ಗರಿಷ್ಠ 12 ಕ್ವಿಂಟಾಲ್‌ ಮೆಕ್ಕೆಜೋಳವನ್ನು ಮಾತ್ರ ಯೋಜನೆಯಡಿ ಪರಿಗಣಿಸಲಾಗುತ್ತದೆ.
  • ರಾಜ್ಯಾದ್ಯಂತ ಒಟ್ಟಾರೆಯಾಗಿ ಗರಿಷ್ಠ 4 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳದ ವಹಿವಾಟಿಗೆ ಮಾತ್ರ ಈ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯ ಲಾಭ ಸಿಗಲಿದೆ.
  • ಈ ಮಿತಿಗಳನ್ನು ವಿಧಿಸುವ ಮೂಲಕ ಸರ್ಕಾರವು ಹೆಚ್ಚಿನ ಸಂಖ್ಯೆಯ ಸಣ್ಣ ರೈತರಿಗೆ ಯೋಜನೆಯ ಪ್ರಯೋಜನ ತಲುಪುವಂತೆ ಗುರಿ ಹೊಂದಿದೆ.
  • ಅರ್ಹ ಫಲಾನುಭವಿಗಳನ್ನು ಗುರುತಿಸಲು ರೈತರ ಭೂ ದಾಖಲೆಗಳನ್ನು ಫ್ರೂಟ್ಸ್‌ ತಂತ್ರಾಂಶದ ಮೂಲಕ ಕಡ್ಡಾಯವಾಗಿ ಪರಿಶೀಲಿಸಲಾಗುತ್ತದೆ.

ಯಾರಿಗೆ ಈ ಯೋಜನೆ ಅನ್ವಯಿಸುವುದಿಲ್ಲ?

  • ಎಥೆನಾಲ್ ಉತ್ಪಾದನಾ ಘಟಕಗಳಿಗೆ ಮೆಕ್ಕೆಜೋಳವನ್ನು ಪೂರೈಕೆ ಮಾಡಿದ ರೈತರಿಗೆ ಈ ಯೋಜನೆಯಡಿ ಪರಿಹಾರ ಧನ ಅನ್ವಯಿಸುವುದಿಲ್ಲ.
  • ಕೋಳಿ ಆಹಾರ ಅಥವಾ ಜಾನುವಾರು ಆಹಾರ ತಯಾರಿಕಾ ಘಟಕಗಳಿಗೆ ನೇರವಾಗಿ ಮೆಕ್ಕೆಜೋಳವನ್ನು ಮಾರಾಟ ಮಾಡಿದ ರೈತರನ್ನು ಈ ಯೋಜನೆಯಿಂದ ಹೊರಗಿಡಲಾಗಿದೆ.
  • ಕರ್ನಾಟಕ ಹಾಲು ಮಹಾಮಂಡಳಿ ಅಥವಾ ಅದರ ಒಕ್ಕೂಟಗಳಿಗೆ ಮೆಕ್ಕೆಜೋಳ ಪೂರೈಸಿದ ರೈತರು ಕೂಡ ಈ ಸೌಲಭ್ಯ ಪಡೆಯಲು ಅರ್ಹರಲ್ಲ.
  • ಈ ಮೇಲಿನ ಸಂಸ್ಥೆಗಳಿಗೆ ಈಗಾಗಲೇ ಪೂರೈಕೆ ಮಾಡಿರುವ ರೈತರಿಗೆ ಸರ್ಕಾರದ ಈ ಬೆಲೆ ವ್ಯತ್ಯಾಸದ ಪರಿಹಾರ ಧನ ದೊರೆಯುವುದಿಲ್ಲ ಎಂದು ಅಧಿಕೃತವಾಗಿ ತಿಳಿಸಲಾಗಿದೆ.

ಅನುಷ್ಠಾನ ಪ್ರಕ್ರಿಯೆ ಮತ್ತು ನೋಂದಣಿ ಹೇಗೆ?

  • ಈ ಯೋಜನೆಯನ್ನು ಸಂಪೂರ್ಣವಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ವತಿಯಿಂದ ಜಾರಿಗೊಳಿಸಲಾಗುತ್ತದೆ.
  • ನೋಂದಣಿಗಾಗಿ ಮೊದಲಿಗೆ, ರೈತರು ಕರ್ನಾಟಕ ಸರ್ಕಾರದ ಅಧಿಕೃತ ಕರ್ನಾಟಕ ಕಿಸಾನ್ ಪೋರ್ಟಲ್‌ kkisan.karnataka.gov.in/ ಗೆ ಭೇಟಿ ನೀಡಬೇಕು.
  • ಪೋರ್ಟಲ್‌ನಲ್ಲಿ ಲಭ್ಯವಿರುವ "ರೈತರ ನೋಂದಣಿ" ಅಥವಾ ಸಂಬಂಧಿತ ಯೋಜನೆಯ ಲಿಂಕ್ ಅನ್ನು ಹುಡುಕಿ ಅದರ ಮೇಲೆ ಕ್ಲಿಕ್ ಮಾಡಬೇಕು.
  • ನಂತರ, NeML ವೇದಿಕೆಯ ಮೂಲಕ ನಿಮ್ಮ ಆಧಾರ್ ಕಾರ್ಡ್ ಬಳಸಿ ಬಯೋಮೆಟ್ರಿಕ್ ದೃಢೀಕರಣ ಅಥವಾ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
  • ನಿಮ್ಮ ಜಮೀನಿನ ಮಾಹಿತಿ ಸರಿಯಾಗಿರುವುದನ್ನು ಖಚಿತಪಡಿಸಿಕೊಳ್ಳಲು, FRUITS ತಂತ್ರಾಂಶದಲ್ಲಿ ದಾಖಲಾಗಿರುವ ಭೂ ದಾಖಲೆಗಳನ್ನು ನಿಮ್ಮ ಕಿಸಾನ್‌ ಪ್ರೊಫೈಲ್‌ಗೆ ಲಿಂಕ್ ಮಾಡಲಾಗಿದೆಯೇ ಎಂದು ಪರಿಶೀಲಿಸಿಕೊಳ್ಳಿ.
  • ಮಾರುಕಟ್ಟೆಗೆ ತರುವ ಮೆಕ್ಕೆಜೋಳದ ಗುಣಮಟ್ಟವನ್ನು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ನೇಮಿಸಿದ ತಾಂತ್ರಿಕ ಅಧಿಕಾರಿಗಳು ಕಡ್ಡಾಯವಾಗಿ ತಪಾಸಣೆ ಮಾಡುತ್ತಾರೆ.
  • ಈ ಪ್ರಕ್ರಿಯೆಯು ಪಾರದರ್ಶಕತೆಯಿಂದ ಕೂಡಿರಲು ಭೂ ದಾಖಲೆ ಮತ್ತು ಬೆಳೆ ಸಮೀಕ್ಷೆಯ ದತ್ತಾಂಶಗಳ ತಾಳೆ ನೋಡುವುದು ಅತ್ಯಂತ ಅವಶ್ಯಕವಾಗಿದೆ.
  • ಅಂತಿಮವಾಗಿ, ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು; ತದನಂತರ ಅಧಿಕಾರಿಗಳು ಭೂ ದಾಖಲೆಗಳು, ಆಧಾರ್ ಮತ್ತು ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ಆಧರಿಸಿ ನಿಮ್ಮ ಅರ್ಜಿಯನ್ನು ಪರಿಶೀಲಿಸುತ್ತಾರೆ.
  • ರೈತರಿಗೆ ಸಿಗಬೇಕಾದ ಪರಿಹಾರದ ಮೊತ್ತವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗುತ್ತದೆ.



ಆಡಳಿತಾತ್ಮಕ ಮೇಲ್ವಿಚಾರಣೆ

ಜಿಲ್ಲಾಧಿಕಾರಿಗಳು ಈ ಯೋಜನೆಯ ಸಂಪೂರ್ಣ ಉಸ್ತುವಾರಿ ವಹಿಸಲಿದ್ದು, ಮಾರುಕಟ್ಟೆಗೆ ಬರುವ ಮೆಕ್ಕೆಜೋಳದ ದೈನಂದಿನ ವರದಿ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುತ್ತಾರೆ. ಏಕೀಕೃತ ಮಾರುಕಟ್ಟೆ ವೇದಿಕೆಯಲ್ಲಿ ಮೊದಲ ವಹಿವಾಟು ನಡೆದ ದಿನದಿಂದ ಒಂದು ತಿಂಗಳ ಕಾಲ ಈ ಯೋಜನೆ ಚಾಲ್ತಿಯಲ್ಲಿರುತ್ತದೆ. ಯೋಜನೆ ಮುಗಿದ ಎರಡು ತಿಂಗಳೊಳಗೆ ಸಮಗ್ರ ಲೆಕ್ಕಪರಿಶೋಧನೆ ನಡೆಸಲಾಗುವುದು.

]]>
Tue, 06 Jan 2026 07:28:44 +0530 shivuagrico
Pmkisan id&ಪಿಎಂ ಕಿಸಾನ್: ರೈತರಿಗೀಗ ವಿಶಿಷ್ಟ ಡಿಜಿಟಲ್ ಐಡಿ ಕಡ್ಡಾಯ! ಏನಿದು ರೈತ ಐಡಿ? ನೋಂದಣಿ ಹೇಗೆ? ಪ್ರಯೋಜನಗಳೇನು? https://krushirushi.in/Pmkisan-id-2373 https://krushirushi.in/Pmkisan-id-2373 Pmkisan id-ಪಿಎಂ ಕಿಸಾನ್: ರೈತರಿಗೀಗ ವಿಶಿಷ್ಟ ಡಿಜಿಟಲ್ ಐಡಿ ಕಡ್ಡಾಯ! ಏನಿದು ರೈತ ಐಡಿ? ನೋಂದಣಿ ಹೇಗೆ? ಪ್ರಯೋಜನಗಳೇನು?

ರೈತ ಬಂಧುಗಳ ಗಮನಕ್ಕೆ! ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 6,000 ರೂ.ಗಳ ವಾರ್ಷಿಕ ಸಹಾಯಧನ ಪಡೆಯಲು 'ರೈತ ಐಡಿ' ಕಡ್ಡಾಯವಾಗಿದೆ. ಇದು ನಿಮ್ಮ ಅರ್ಹತೆಯನ್ನು ಖಚಿತಪಡಿಸಿ, ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರುವಂತೆ ಮಾಡುತ್ತದೆ. ಮೋಸಗಾರರನ್ನು ತಡೆಯಲು ಮತ್ತು ನಿಜವಾದ ರೈತರಿಗೆ ನೆರವಾಗಲು ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಕರ್ನಾಟಕದ 'ಫೂಟ್ಸ್' ಮಾದರಿಯಲ್ಲಿ ಈ ಐಡಿ ನೀಡಲಾಗುತ್ತಿದೆ. ಹೊಸದಾಗಿ ಸೇರಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ (PM-Kisan) ಯೋಜನೆಯಲ್ಲಿ ಪಾರದರ್ಶಕತೆ ತರಲು ಮತ್ತು ನಕಲಿ ಫಲಾನುಭವಿಗಳನ್ನು ಪತ್ತೆಹಚ್ಚಲು ಕೇಂದ್ರ ಸರ್ಕಾರವು ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿದೆ. ಕರ್ನಾಟಕದ ಯಶಸ್ವಿ 'ಫ್ರೂಟ್ಸ್‌' ಮಾದರಿಯನ್ನೇ ಆಧರಿಸಿ ದೇಶಾದ್ಯಂತ ಈಗ 'ವಿಶಿಷ್ಟ ರೈತ ಗುರುತಿನ ಚೀಟಿ' ವಿತರಿಸುವ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ ಪಿಎಂ ಕಿಸಾನ್‌ ಕಂತಿನ ಹಣವನ್ನು ಪಡೆಯಲಯ ವಿಶಿಷ್ಟ ರೈತ ಐಡಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ಪಿಎಂ ಕಿಸಾನ್‌ ರೈತ ಐಡಿ , ಇದರ ಪ್ರಯೋಜನಗಳೇನು? ನೋಂದಣಿ ಹೇಗೆ ಎಂಬುದನ್ನು ತಿಳಿಯೋಣ.

ಏನಿದು 'ರೈತ ಐಡಿ'?

2025ರಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಲಾಭವನ್ನು ಪಡೆಯಲು 'ರೈತ ಐಡಿ' ಅಥವಾ ಕಿಸಾನ್ ಐಡಿ ಕಡ್ಡಾಯವಾಗಿದ್ದು, ಇದು ಅರ್ಹ ರೈತರಿಗೆ ವಾರ್ಷಿಕ 6,000 ರೂ.ಗಳ ಆರ್ಥಿಕ ನೆರವು ನಿರಂತರವಾಗಿ ಸಿಗುವಂತೆ ಮಾಡುತ್ತದೆ. ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ರೈತರಿಗೆ ನೀಡಲಾಗುವ ಒಂದು ಅನನ್ಯ ಡಿಜಿಟಲ್ ಸಂಖ್ಯೆಯೇ 'ರೈತ ಐಡಿ'. ಇದು ರೈತರ ಆಧಾರ್ ಮತ್ತು ಭೂ ದಾಖಲೆಗಳೊಂದಿಗೆ (RTC) ನೇರವಾಗಿ ಸಂಪರ್ಕ ಹೊಂದಿರುತ್ತದೆ. ಕೇಂದ್ರ ಸರ್ಕಾರದ 'ಅಗ್ರಿಸ್ಟ್ಯಾಕ್' ಉಪಕ್ರಮದ ಭಾಗವಾಗಿರುವ ಈ ಡಿಜಿಟಲ್ ಐಡಿಯು ರೈತರ ಭೂ ದಾಖಲೆಗಳು, ಆಧಾರ್ ಮತ್ತು ಬ್ಯಾಂಕ್ ವಿವರಗಳನ್ನು ಒಂದೇ ದತ್ತಸಂಚಯದಲ್ಲಿ ಸಂಯೋಜಿಸುತ್ತದೆ. ಇದರಿಂದ ನಕಲಿ ಫಲಾನುಭವಿಗಳನ್ನು ತಡೆದು ನೇರವಾಗಿ ನೈಜ ರೈತರ ಖಾತೆಗೆ ಹಣ ವರ್ಗಾಯಿಸಲು ಸಾಧ್ಯವಾಗುತ್ತದೆ. ಕರ್ನಾಟದಲ್ಲಿ ಈಗಾಗಲೇ ಜಾರಿಯಲ್ಲಿರುವ ಫ್ರೂಟ್ಸ್‌ ಐಡಿ ಮಾದರಿಯಲ್ಲಿಯೇ ಇದನ್ನು ರೂಪಿಸಲಾಗಿದೆ. ಒಂದು ವೇಳೆ ರೈತರು ಈ ಐಡಿಯನ್ನು ಹೊಂದಿಲ್ಲದಿದ್ದರೆ ಅವರ 2,000 ರೂ.ಗಳ ಕಂತಿನ ಹಣ ಸ್ಥಗಿತಗೊಳ್ಳುವ ಸಾಧ್ಯತೆಯಿದ್ದು, ಪಾವತಿ ವಿಳಂಬ ಮತ್ತು ಅರ್ಜಿ ತಿರಸ್ಕಾರವನ್ನು ತಪ್ಪಿಸಲು ಆನ್‌ಲೈನ್ ಮೂಲಕ ಶೀಘ್ರವಾಗಿ ನೋಂದಣಿ ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಈ ಸರಳ ನೋಂದಣಿ ಪ್ರಕ್ರಿಯೆಯು ರೈತರಿಗೆ ಭವಿಷ್ಯದ ಸರ್ಕಾರಿ ಯೋಜನೆಗಳನ್ನು ಪಡೆಯಲು ಮತ್ತು ಆರ್ಥಿಕ ಭದ್ರತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ.

ಈ ಐಡಿ ಏಕೆ ಅಗತ್ಯ?

  • ಒಂದು ರಾಷ್ಟ್ರ, ಒಂದು ರೈತ ಐಡಿ: ಒಬ್ಬ ರೈತ ದೇಶದ ವಿವಿಧ ರಾಜ್ಯಗಳಲ್ಲಿ ಭೂಮಿ ಹೊಂದಿದ್ದರೂ, ಆತನಿಗೆ ಒಂದೇ ಐಡಿ ಇರುತ್ತದೆ. ಇದರಿಂದ ಬೇರೆ ಬೇರೆ ರಾಜ್ಯಗಳಲ್ಲಿ ಜಮೀನು ತೋರಿಸಿ ಹಣ ಪಡೆಯುವುದಕ್ಕೆ ತಡೆ ಬೀಳಲಿದೆ.
  • ನಕಲಿ ತಡೆ: ಕುಟುಂಬವೊಂದರಲ್ಲಿ ಗಂಡ-ಹೆಂಡತಿ ಇಬ್ಬರೂ ಹಣ ಪಡೆಯುತ್ತಿದ್ದರೆ ಅಂತಹ ಖಾತೆಗಳನ್ನು ಗುರುತಿಸಿ ರದ್ದುಪಡಿಸಲಾಗುತ್ತದೆ.
  • ಕುಟುಂಬಕ್ಕೆ ಒಬ್ಬರಿಗೆ ಮಾತ್ರ: ನಿಯಮದಂತೆ ಒಂದು ರೈತ ಕುಟುಂಬಕ್ಕೆ ವರ್ಷಕ್ಕೆ 6,000 ರೂ. ಮಾತ್ರ ಸಿಗಲಿದೆ.
  • ಪಾರದರ್ಶಕತೆ: ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ಹಣ ನೇರವಾಗಿ ರೈತರ ಖಾತೆಗೆ ಜಮೆಯಾಗಲು ಇದು ಸಹಕಾರಿ.

ಕರ್ನಾಟಕದ 'ಫೂಟ್ಸ್' ಮಾದರಿ ಈಗ ರಾಷ್ಟ್ರಕ್ಕೆ ಮಾದರಿ

ಕರ್ನಾಟಕವು ಈಗಾಗಲೇ ಫ್ರೂಟ್ಸ್‌ (Farmer Registration and Unified Beneficiary Information System) ಮೂಲಕ ರೈತರಿಗೆ ಏಕಗವಾಕ್ಷಿ ಸೇವೆಯನ್ನು ನೀಡುತ್ತಿದೆ. ರಾಜ್ಯದ ಈ ಯಶಸ್ಸನ್ನು ಗಮನಿಸಿದ ಕೇಂದ್ರ ಸರ್ಕಾರ, ಈಗ ಇದನ್ನು ದೇಶದ 14 ರಾಜ್ಯಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿದೆ. ರಾಜ್ಯದಲ್ಲಿ ಒಟ್ಟು 59,13,902 ರೈತರಿಗೆ ರೈತ ಐಡಿ ನೀಡುವ ಗುರಿ ಇದೆ. ಈಗಾಗಲೇ ಫೂಟ್ಸ್ ಐಡಿ ಹೊಂದಿರುವ 45,14,772 ರೈತರನ್ನು ಅಂಗೀಕರಿಸಲಾಗಿದ್ದು, ಬಾಕಿ ಇರುವ 13.99 ಲಕ್ಷ ರೈತರಿಗೆ ಐಡಿ ವಿತರಣೆ ಪ್ರಕ್ರಿಯೆ ನಡೆಯುತ್ತಿದೆ.

ಅನರ್ಹರ ಖಾತೆಗಳಿಗೆ ಬೀಗ!

ಪಿಎಂ-ಕಿಸಾನ್ ಯೋಜನೆಯಲ್ಲಿ ಪಾರದರ್ಶಕತೆ ತರಲು ಜಾರಿಗೆ ತಂದ ಡಿಜಿಟಲ್ ತಪಾಸಣಾ ಕ್ರಮಗಳಿಂದಾಗಿ ದೇಶಾದ್ಯಂತ ಲಕ್ಷಾಂತರ ಅನರ್ಹ ಖಾತೆಗಳನ್ನು ಪತ್ತೆಹಚ್ಚಿ ಸ್ಥಗಿತಗೊಳಿಸಲಾಗಿದೆ. ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ 7ನೇ ಕಂತಿನಲ್ಲಿ 52,81,757 ರೈತರಿದ್ದ ಫಲಾನುಭವಿಗಳ ಸಂಖ್ಯೆಯು 21ನೇ ಕಂತಿನ ವೇಳೆಗೆ 41,43,679ಕ್ಕೆ ಇಳಿಕೆಯಾಗಿದ್ದು, ಸುಮಾರು 11.38 ಲಕ್ಷಕ್ಕೂ ಅಧಿಕ ಅನರ್ಹ ಖಾತೆಗಳು ಬಂದ್ ಆಗಿವೆ. ಇದೇ ರೀತಿ ದೇಶಾದ್ಯಂತ 7ನೇ ಕಂತಿನಲ್ಲಿದ್ದ 9.84 ಕೋಟಿ ಫಲಾನುಭವಿಗಳ ಸಂಖ್ಯೆಯು ಕಳೆದ ನವೆಂಬರ್‌ನಲ್ಲಿ ಬಿಡುಗಡೆಯಾದ 21ನೇ ಕಂತಿನ ವೇಳೆಗೆ 9.34 ಕೋಟಿಗೆ ಇಳಿದಿದ್ದು, ಒಟ್ಟಾರೆ 50.20 ಲಕ್ಷಕ್ಕೂ ಹೆಚ್ಚು ಅನರ್ಹ ಖಾತೆಗಳನ್ನು ವ್ಯವಸ್ಥೆಯಿಂದ ಹೊರಹಾಕುವ ಮೂಲಕ ಅರ್ಹ ರೈತರಿಗೆ ಮಾತ್ರ ಯೋಜನೆಯ ಲಾಭ ತಲುಪುವಂತೆ ಮಾಡಲಾಗಿದೆ.

ಅರ್ಹತಾ ಮಾನದಂಡಗಳೇನು?

  • ಈ ಯೋಜನೆಯಡಿ ಸೌಲಭ್ಯ ಪಡೆಯಲು ರೈತರು ಕನಿಷ್ಠ 1 ರಿಂದ 2 ಎಕರೆಯಷ್ಟು ಸ್ವಂತ ಕೃಷಿ ಜಮೀನನ್ನು ಹೊಂದಿರಬೇಕು.
  • ರೈತರ ಹೆಸರಿನಲ್ಲಿ ಭೂ ಹಿಡುವಳಿ ವಿಸ್ತೀರ್ಣವನ್ನು ದೃಢೀಕರಿಸುವ ಅಧಿಕೃತ ಆರ್‌ಟಿಸಿ (RTC) ಅಥವಾ ಪಹಣಿ ದಾಖಲೆಗಳು ಇರುವುದು ಕಡ್ಡಾಯವಾಗಿದೆ.
  • ಇನ್ನು ಆರ್ಥಿಕ ಸ್ಥಿತಿಗತಿಯನ್ನು ಪರಿಗಣಿಸಿ, ಅರ್ಜಿ ಸಲ್ಲಿಸುವ ರೈತರಿಗೆ ಮಾಸಿಕ 10 ಸಾವಿರ ರೂಪಾಯಿಗಿಂತ ಹೆಚ್ಚಿನ ಪಿಂಚಣಿ ಬರುತ್ತಿರಬಾರದು ಹಾಗೂ ಅವರು ಆದಾಯ ತೆರಿಗೆ ಪಾವತಿದಾರರಾಗಿರಬಾರದು.
  • ಯೋಜನೆಯಲ್ಲಿ ಯಾವುದೇ ಅಡೆತಡೆಯಿಲ್ಲದೆ ಹಣ ಪಡೆಯಲು ರೈತರು ತಮ್ಮ ಆಧಾರ್ ಕಾರ್ಡ್ ಮತ್ತು ಜಮೀನಿನ ದಾಖಲೆಗಳನ್ನು ನವೀಕರಿಸುವುದರ ಜೊತೆಗೆ ಕಡ್ಡಾಯವಾಗಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರಬೇಕು.

ಯಾರಿಗೆ ಈ ಯೋಜನೆ ಅನ್ವಯಿಸುವುದಿಲ್ಲ?

  • ತಿಂಗಳಿಗೆ 10,000 ರೂ.ಗಿಂತ ಹೆಚ್ಚು ಪಿಂಚಣಿ ಪಡೆಯುವ ಸರ್ಕಾರಿ ನೌಕರರು (ನಿವೃತ್ತರು ಸೇರಿ).
  • ಆದಾಯ ತೆರಿಗೆ ಅಥವಾ ಜಿಎಸ್‌ಟಿ ಪಾವತಿದಾರರು.
  • ಸಾಂಸ್ಥಿಕ ಭೂಮಿ ಹೊಂದಿರುವವರು.
  • ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಜನರು ಅರ್ಜಿ ಸಲ್ಲಿಸಿದರೆ (ಒಬ್ಬರಿಗೆ ಮಾತ್ರ ಅವಕಾಶ).

ರೈತ ಐಡಿ ಪಡೆಯುವುದು ಹೇಗೆ?

pm kisan portal
  • ಹೊಸದಾಗಿ ಅರ್ಜಿ ಸಲ್ಲಿಸುವ ರೈತರು ಕೆಳಗಿನ ಹಂತಗಳನ್ನು ಅನುಸರಿಸಿ ರೈತ ಐಡಿ ಪಡೆಯಬಹುದು:
  • ಪಿಎಂ ಕಿಸಾನ್ ಅಧಿಕೃತ ಪೋರ್ಟಲ್ pmkisan.gov.in/RegistrationFormupdated.aspx ಗೆ ಭೇಟಿ ನೀಡಿ.
  • 'New Farmer Registration' ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
  • ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ನೀಡಿ, OTP ಮೂಲಕ ಪರಿಶೀಲಿಸಿ.
  • ಭೂಮಿ ವಿವರ (RTC/ಪಹಣಿ) ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ಅಪ್‌ಲೋಡ್ ಮಾಡಿ.
  • ಅಧಿಕಾರಿಗಳ ಪರಿಶೀಲನೆಯ ನಂತರ ನಿಮಗೆ ನಿಮ್ಮ 'ರೈತ ಐಡಿ' ದೊರೆಯುತ್ತದೆ.

]]>
Mon, 05 Jan 2026 18:46:39 +0530 shivuagrico
Udyama sheelatha yojane&ಸ್ವಂತ ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿ ನೇರ ಖಾತೆಗೆ ಜಮಾ https://krushirushi.in/Udyama-sheelatha-yojane-2372 https://krushirushi.in/Udyama-sheelatha-yojane-2372 Udyama sheelatha yojane-ಸ್ವಂತ ಉದ್ಯೋಗ ಆರಂಭಿಸಲು 2 ಲಕ್ಷ ರೂ. ಸಹಾಯಧನ


ಕರ್ನಾಟಕ ಸರ್ಕಾರದ 2025-30ರ ಕೈಗಾರಿಕಾ ನೀತಿಯು ಯುವಕರು, ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಆರ್ಥಿಕ ಕನಸುಗಳಿಗೆ ರೆಕ್ಕೆ ನೀಡುತ್ತಿದೆ! ಸ್ವಯಂ ಉದ್ಯೋಗ ಸ್ಥಾಪಿಸಲು ಭಾರಿ ಸಬ್ಸಿಡಿ, ಸುಲಭ ಸಾಲ ಮತ್ತು ಪರಿಶಿಷ್ಟ ಜಾತಿ/ಇತರ ಸಮುದಾಯದವರಿಗೆ ವಿಶೇಷ ಸಹಾಯಧನ ಲಭ್ಯವಿದೆ. ಸಣ್ಣ ವ್ಯಾಪಾರ, ಸಾರಿಗೆ, ಮಹಿಳಾ ಉದ್ಯಮಶೀಲತೆ - ಎಲ್ಲದಕ್ಕೂ ಆರ್ಥಿಕ ನೆರವು, ನಿಮ್ಮ ಕನಸು ನನಸಾಗಿಸಲು ಸರ್ಕಾರ ಸದಾ ಸಿದ್ಧ!

ಒಂದು ಉದ್ದಿಮೆ ಯಶಸ್ವಿಯಾಗಿ ಬೆಳೆಯಬೇಕೆಂದರೆ ಆರ್ಥಿಕ ಪ್ರೋತ್ಸಾಹ ಅತ್ಯಗತ್ಯ. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು 2025-30ರ ಕೈಗಾರಿಕಾ ನೀತಿಯ ಅಡಿಯಲ್ಲಿ ನಿರುದ್ಯೋಗಿ ಯುವಕರು, ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಆರ್ಥಿಕ ಸಬಲೀಕರಣಕ್ಕಾಗಿ ವಿವಿಧ ನಿಗಮಗಳ ಮೂಲಕ ಭಾರಿ ಸಬ್ಸಿಡಿ ಮತ್ತು ಸಾಲದ ಸೌಲಭ್ಯಗಳನ್ನು ಘೋಷಿಸಿದೆ. ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಹಾಗೂ ಸಮುದಾಯಗಳ ಆರ್ಥಿಕ ಸಬಲೀಕರಣಕ್ಕಾಗಿ ವಿವಿಧ ಅಭಿವೃದ್ಧಿ ನಿಗಮಗಳ ಮೂಲಕ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಭಾರಿ ಸಹಾಯಧನವನ್ನು ನೀಡುತ್ತಿದೆ.

ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಎಂದರೇನು?

ಈ ಯೋಜನೆಯಡಿ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರು ಸಣ್ಣ ಕೈಗಾರಿಕೆ, ಸೇವಾ ವಲಯ ಅಥವಾ ವ್ಯಾಪಾರವನ್ನು ಪ್ರಾರಂಭಿಸಲು ಬ್ಯಾಂಕ್‌ಗಳ ಸಹಯೋಗದೊಂದಿಗೆ ಹಣಕಾಸಿನ ನೆರವು ಪಡೆಯಬಹುದು. ನೀವು ಸ್ವಂತ ಉದ್ಯೋಗ ಅಥವಾ ಸಾರಿಗೆ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದ್ದರೆ, ಪರಿಶಿಷ್ಟ ಜಾತಿ ಸಮುದಾಯದ ನಿರುದ್ಯೋಗ ಯುವಕ-ಯುವತಿಯರಿಗೆ ಈ ಯೋಜನೆಯಡಿ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ಇಲಾಖೆಯ ಆಯಾ ನಿಗಮಗಳಿಂದ ಘಟಕ ವೆಚ್ಚ ಶೇ. 70 ರಷ್ಟು ಮತ್ತು ಗರಿಷ್ಠ ರೂ. 2.00 ಲಕ್ಷ ಸಹಾಯಧನ ನೀಡಲಾಗುವುದು. ಈ ಯೋಜನೆಯಡಿ ಪರಿಶಿಷ್ಟ ಜಾತಿಯ ಮಾದಿಗ ಜಾತಿಗೆ ಸೇರಿದ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯಧನದ ಆರ್ಥಿಕ ನೆರವನ್ನು ಒದಗಿಸಲಾಗುವುದು.

ಯೋಜನೆಯ ಪ್ರಮುಖ ಹಂತಗಳು

  • ಐ.ಎಸ್.ಬಿ - 1 : ಈ ಯೋಜನೆಯಡಿ ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂದಿತ ಜಾತಿಗೆ ಸೇರಿದ ನಿರುದ್ಯೋಗಿ ಪುರುಷ ಮತ್ತು ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಘಟಕ ವೆಚ್ಚದ ಶೆ. 20 ರಷ್ಟು ಅಥವಾ ಗರಿಷ್ಟ ರೂ.1.00 ಲಕ್ಷಗಳವರೆಗೆ ಸಹಾಯಧನವನ್ನು ಮಂಜೂರು ಮಾಡಿ ಬ್ಯಾಂಕ್‌ ಸಹಯೋಗದೊಂದಿಗೆ ಯೋಜನೆಯನ್ನು ಅನುಷ್ಟಾನಗೊಳಿಸಲಾಗುವುದು.
  • ಐ.ಎಸ್.ಬಿ - 2 : ಈ ಯೋಜನೆಯಡಿ ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂದಿತ ಜಾತಿಗೆ ಸೇರಿದ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಘಟಕ ವೆಚ್ಚದ ಶೆ. 70 ರಷ್ಟು ಅಥವಾ ಗರಿಷ್ಟ ರೂ.2.00 ಲಕ್ಷಗಳವರೆಗೆ ಸಹಾಯಧನವನ್ನು ಮಂಜೂರು ಮಾಡಿ ಬ್ಯಾಂಕ್‌ ಸಹಯೋಗದೊಂದಿಗೆ ಯೋಜನೆಯನ್ನು ಅನುಷ್ಟಾನಗೊಳಿಸಲಾಗುವುದು.
  • ಐ.ಎಸ್.ಬಿ - 3 : ಈ ಯೋಜನೆಯಡಿ ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂದಿತ ಜಾತಿಗೆ ಸೇರಿದ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯಮ ಶೀಲತಾ ಅಭಿವೃದ್ಧಿ ಸ್ವಾವಲಂಬಿ ಸಾರಥಿ (ಸರಕು/ಟ್ಯಾಕ್ಸಿ) ಯೋಜನೆಯಡಿ 4 ಚಕ್ರದ ವಾಹನಗಳಿಗೆ ಘಟಕ ವೆಚ್ಚದ ಶೆ. 75 ರಷ್ಟು ಅಥವಾ ಗರಿಷ್ಟ ರೂ.4.00 ಲಕ್ಷಗಳವರೆಗೆ ಸಹಾಯಧನವನ್ನು ಮಂಜೂರು ಮಾಡಿ ಬ್ಯಾಂಕ್‌ ಸಹಯೋಗದೊಂದಿಗೆ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ.

ವಿವಿಧ ಅಭಿವೃದ್ಧಿ ನಿಗಮಗಳ ಯೋಜನೆಗಳು

  • ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ (SC) ವತಿಯಿಂದ ಸಣ್ಣ ವ್ಯಾಪಾರಗಳಿಗಾಗಿ 1 ಲಕ್ಷ ರೂ.ದ ನೆರವು ನೀಡಲಾಗುತ್ತಿದ್ದು, ಇದರಲ್ಲಿ 50,000 ರೂ. ಸಬ್ಸಿಡಿ ಮತ್ತು 50,000 ರೂ. ಸಾಲ ಸೌಲಭ್ಯ ಒದಗಿಸಲಾಗುತ್ತಿದೆ.
  • ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (KMDC) ಅಡಿಯಲ್ಲಿ 'ಶ್ರಮ ಶಕ್ತಿ' ಯೋಜನೆಯ ಮೂಲಕ ಶೇ. 33ರಷ್ಟು (ಗರಿಷ್ಠ ₹1 ಲಕ್ಷ) ಸಬ್ಸಿಡಿ ಅಥವಾ ಸರಳ ಸಾಲದ ಆಯ್ಕೆಗಳನ್ನು ನೀಡಲಾಗುತ್ತಿದೆ.
  • ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ (ST) ಘಟಕ ವೆಚ್ಚದ ಶೇ. 70ರಷ್ಟು ಅಥವಾ ಗರಿಷ್ಠ 2.00 ಲಕ್ಷ ರೂ.ದವರೆಗೆ ಸಹಾಯಧನ ನೀಡುತ್ತಿದೆ.
  • ಬಂಜಾರ ಸಮುದಾಯದ ಏಳಿಗೆಗಾಗಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ (KTDC) ಕಿರು ಉದ್ದಿಮೆಗಳಿಗೆ ಶೇ. 50ರಷ್ಟು ಸಬ್ಸಿಡಿ ಒದಗಿಸುತ್ತಿದೆ.

ಕರ್ನಾಟಕ ಕೈಗಾರಿಕಾ ನೀತಿಯಡಿ ಉದ್ಯಮಶೀಲತೆ ಬೆಂಬಲ

ಕರ್ನಾಟಕದ ನೂತನ ಕೈಗಾರಿಕಾ ನೀತಿ 2025-30ರ ಅಡಿಯಲ್ಲಿ ರಾಜ್ಯ ಸರ್ಕಾರವು ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸಲು ಹತ್ತು ಹಲವು ಆಕರ್ಷಕ ಸೌಲಭ್ಯಗಳನ್ನು ಘೋಷಿಸಿದೆ. ಈ ನೀತಿಯಡಿ ಸೂಕ್ಷ್ಮ ಮತ್ತು ಸಣ್ಣ ಉದ್ದಿಮೆಗಳಿಗೆ ಅವುಗಳ ಸ್ಥಿರ ಬಂಡವಾಳ ಹೂಡಿಕೆಯ ಮೇಲೆ ಶೇಕಡಾ 20 ರಿಂದ 30 ರವರೆಗೆ ಭಾರಿ ಸಬ್ಸಿಡಿಯನ್ನು ನೀಡಲಾಗುತ್ತಿದ್ದು, ಮಹಿಳಾ ಉದ್ಯಮಿಗಳ ನೇತೃತ್ವದ ಘಟಕಗಳಿಗೆ ಹೆಚ್ಚುವರಿಯಾಗಿ ಶೇಕಡಾ 5 ರಷ್ಟು ಪ್ರೋತ್ಸಾಹಕ ಸಬ್ಸಿಡಿ ಲಭ್ಯವಿದೆ. ಎಲೆಕ್ಟ್ರಾನಿಕ್ಸ್, ಬಾಹ್ಯಾಕಾಶ ಮತ್ತು ರಕ್ಷಣೆ, ಎಲೆಕ್ಟ್ರಿಕ್ ವಾಹನಗಳು (EV) ಹಾಗೂ ನವೀಕರಿಸಬಹುದಾದ ಇಂಧನದಂತಹ ಆದ್ಯತಾ ವಲಯಗಳಿಗೆ ವಿಶೇಷ ಪ್ಯಾಕೇಜ್‌ಗಳನ್ನು ನೀಡಲಾಗುತ್ತಿದೆ. ಇದರೊಂದಿಗೆ, ಉದ್ದಿಮೆದಾರರಿಗೆ ಆರ್ಥಿಕ ಹೊರೆ ತಗ್ಗಿಸಲು ಸತತ 5 ವರ್ಷಗಳ ಕಾಲ ವಿದ್ಯುತ್ ತೆರಿಗೆಯಿಂದ ಸಂಪೂರ್ಣ ವಿನಾಯಿತಿ ಮತ್ತು ಸ್ಥಿರ ಆಸ್ತಿಗಳ ಮೇಲಿನ ಮುದ್ರಾಂಕ ಶುಲ್ಕ ಹಾಗೂ ನೋಂದಣಿ ಶುಲ್ಕದ ಮರುಪಾವತಿಯಂತಹ ತೆರಿಗೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಅರ್ಹತೆ ಮತ್ತು ಮಾನದಂಡಗಳು

  • ಅರ್ಜಿದಾರರು ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಸಮುದಾಯದವರಾಗಿರಬೇಕು. (ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಎಂದು ಪ್ರಮಾಣ ಪತ್ರವಿದ್ದರೆ, ಮೂಲ ಜಾತಿಯ ಸ್ವಯಂ ಘೋಷಣೆ ಸಲ್ಲಿಸಬೇಕು).
  • ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ ರೂ. 1.50 ಲಕ್ಷ ಹಾಗೂ ನಗರ ಪ್ರದೇಶದವರಿಗೆ ರೂ. 2.00 ಲಕ್ಷ ಮೀರಿರಬಾರದು.
  • ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಅಥವಾ ಅರೆ ಸರ್ಕಾರಿ ನೌಕರಿಯಲ್ಲಿರಬಾರದು.
  • ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದ ಫಲಾನುಭವಿಗಳು ಅಥವಾ ಅವರ ಕುಟುಂಬದವರು ಅರ್ಹರಲ್ಲ.
  • ಉದ್ದಿಮೆ ಸ್ಥಾಪಿಸಲು ಕನಿಷ್ಠ 200 ಚದರ ಅಡಿ ಸ್ವಂತ ಅಥವಾ ಬಾಡಿಗೆ ಸ್ಥಳ ಹೊಂದಿರಬೇಕು.




ಪ್ರಮುಖ ನಿಯಮಗಳು

  • ಬ್ಯಾಂಕಿನಿಂದ ಸಾಲ ಮಂಜೂರಾದ ಘಟಕಗಳಿಗೆ ಮಾತ್ರ ಸರ್ಕಾರದ ಸಹಾಯಧನ ದೊರೆಯುತ್ತದೆ.
  • ಸಹಾಯಧನವನ್ನು ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಲಾಗುತ್ತದೆ.
  • ಈ ಯೋಜನೆಯಡಿ ಪ್ರಯೋಜನ ಪಡೆಯುವ ಅಭ್ಯರ್ಥಿಗಳನ್ನು ನಿಗಮದ ಅಧಿಕೃತ ಆಯ್ಕೆ ಸಮಿತಿಯು ಕಡ್ಡಾಯವಾಗಿ ಆಯ್ಕೆ ಮಾಡಿರಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದವರಿಗೆ ರೂ. 1.50 ಲಕ್ಷ ಹಾಗೂ ನಗರ ಪ್ರದೇಶದವರಿಗೆ ರೂ. 2.00 ಲಕ್ಷ ಮಿತಿಯೊಳಗಿರಬೇಕು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 21 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 50 ವರ್ಷದೊಳಗಿರಬೇಕು.
  • ಯೋಜನೆಯ ಸಹಾಯಧನವು ಕೇವಲ ಬ್ಯಾಂಕ್ ಸಾಲ ಮಂಜೂರಾದ ಘಟಕಗಳಿಗೆ ಮಾತ್ರ ಅನ್ವಯವಾಗುತ್ತದೆ ಮತ್ತು ಅದು ಮಂಜೂರಾತಿ ಪಡೆದ ನಂತರವೇ ಬಿಡುಗಡೆಯಾಗುತ್ತದೆ.
  • ಆಯ್ಕೆಯ ಪ್ರಕ್ರಿಯೆಯ ಯಾವುದೇ ಹಂತದಲ್ಲಿ ಅಭ್ಯರ್ಥಿಯು ಅನರ್ಹನೆಂದು ಕಂಡುಬಂದಲ್ಲಿ, ಅವರ ಅರ್ಜಿಯನ್ನು ತಕ್ಷಣವೇ ತಿರಸ್ಕರಿಸಲಾಗುತ್ತದೆ.
  • ಸರ್ಕಾರದ ಸಹಾಯಧನವನ್ನು ನೇರವಾಗಿ ಫಲಾನುಭವಿಯ ಹೆಸರಿನಲ್ಲಿರುವ ಬ್ಯಾಂಕ್ ಸಾಲದ ಖಾತೆಗೆ ಬಿಡುಗಡೆ ಮಾಡಲಾಗುತ್ತದೆ.




ಸಲ್ಲಿಸಬೇಕಾದ ಅಗತ್ಯ ದಾಖಲೆಗಳು

  • ಭರ್ತಿ ಮಾಡಿದ ಅರ್ಜಿ ಮತ್ತು ಇತ್ತೀಚಿನ ಭಾವಚಿತ್ರ.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ (RD ಸಂಖ್ಯೆ ಕಡ್ಡಾಯ).
  • ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್‌ಬುಕ್ ಪ್ರತಿ.
  • ವೃತ್ತಿ ಅಥವಾ ಕೆಲಸದ ಅನುಭವ ಪ್ರಮಾಣ ಪತ್ರ.
  • ಸಾರಿಗೆ ವಾಹನ ಯೋಜನೆಯಾಗಿದ್ದರೆ ವಾಹನ ಚಾಲನಾ ಪರವಾನಗಿ (DL).
  • ಉದ್ದಿಮೆಯ ಸ್ಥಳದ ಮಾಹಿತಿ ಮತ್ತು ಇತರೆ ಪೂರಕ ದಾಖಲೆಗಳು.

]]>
Mon, 05 Jan 2026 15:10:13 +0530 shivuagrico
Dairy farming&ಹೈನುಗಾರಿಕೆ ಯೋಜನೆಯಡಿ ಎಮ್ಮೆ& ಹಸು ಖರೀದಿಸಲು 1.25 ಲಕ್ಷ ರೂ. ಸಹಾಯಧನ https://krushirushi.in/Dairy-farming-2371 https://krushirushi.in/Dairy-farming-2371 Dairy farming-ಹೈನುಗಾರಿಕೆ ಯೋಜನೆಯಡಿ ಎಮ್ಮೆ- ಹಸು ಖರೀದಿಸಲು 1.25 ಲಕ್ಷ ರೂ. ಸಹಾಯಧನ


ಹೈನುಗಾರಿಕೆಯಲ್ಲಿ ಯಶಸ್ಸು ಸಾಧಿಸಲು ಬಯಸುವವರಿಗೆ ಕರ್ನಾಟಕ ಸರ್ಕಾರವು ಉತ್ತಮ ಅವಕಾಶವನ್ನು ಒದಗಿಸುತ್ತಿದೆ. ಪಶು ಭಾಗ್ಯ ಯೋಜನೆ ಅಡಿಯಲ್ಲಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದಂತಹ ಆರ್ಥಿಕವಾಗಿ ಹಿಂದುಳಿದವರಿಗೆ ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳ ಮೂಲಕ ಎರಡು ಹಸು ಅಥವಾ ಎಮ್ಮೆಗಳನ್ನು ಖರೀದಿಸಲು ಶೇ. 50% ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ಹೈನುಗಾರಿಕೆ ಯೋಜನೆ? ಇದರಿಂದ ರೈತರಿಗೆ ಏನೆಲ್ಲಾ ಪ್ರಯೋಜನಗಳಿವೆ? ಎಂಬುದನ್ನು ತಿಳಿಯೋಣ.

ಏನಿದು ಹೈನುಗಾರಿಕೆ ಯೋಜನೆ?

ಕರ್ನಾಟಕ ಹೈನುಗಾರಿಕೆ ಯೋಜನೆ , ಪಶು ಭಾಗ್ಯ ಯೋಜನೆ ಎಂದೂ ಕರೆಯಲ್ಪಡುತ್ತದೆ. ಇದು ರಾಜ್ಯ ಪ್ರಾಯೋಜಿತ ಉಪಕ್ರಮವಾಗಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಇದು ಕರ್ನಾಟಕದಲ್ಲಿ ಹೈನುಗಾರರನ್ನು ಬೆಂಬಲಿಸುವ ಮತ್ತು ಹೈನುಗಾರಿಕೆ ವಲಯವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಇದು ಡೈರಿ ಘಟಕಗಳನ್ನು ಸ್ಥಾಪಿಸಲು, ಪ್ರಾಣಿಗಳನ್ನು ಖರೀದಿಸಲು ಮತ್ತು ಸಾಲಗಳನ್ನು ಪಡೆಯಲು ಸಹಾಯಧನಗಳನ್ನು ಒಳಗೊಂಡಂತೆ ಡೈರಿ ರೈತರಿಗೆ ಹಣಕಾಸಿನ ನೆರವು, ತರಬೇತಿ ಮತ್ತು ಮಾರುಕಟ್ಟೆ ಬೆಂಬಲವನ್ನು ಒದಗಿಸುತ್ತದೆ. ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ಹೈನುಗಾರಿಕೆಯ ಘಟಕಗಳನ್ನು ಸ್ಥಾಪಿಸಲು ಮತ್ತು ಅಭಿವೃದ್ಧಿಪಡಿಸಲು 1.25 ಲಕ್ಷ ರೂ.ಗಳ ಸಹಾಯಧನವನ್ನು ನೀಡಲಾಗುತ್ತದೆ, ಇದು ಸ್ಥಿರ ಜೀವನೋಪಾಯ ಮತ್ತು ಹಾಲು ಉತ್ಪಾದನೆಗೆ ನೆರವಾಗುತ್ತದೆ

ಯೋಜನೆಯ ಪ್ರಮುಖ ಅಂಶಗಳು

ಈ ಯೋಜನೆಯ ಮುಖ್ಯ ಉದ್ದೇಶವು ಗ್ರಾಮೀಣ ಪ್ರದೇಶದ ರೈತರಿಗೆ ಸ್ಥಿರ ಆದಾಯದ ಮೂಲವನ್ನು ಒದಗಿಸುವುದು ಮತ್ತು ಹೈನುಗಾರಿಕೆ ಕ್ಷೇತ್ರವನ್ನು ಬಲಪಡಿಸುವುದು. ಯೋಜನೆ ಅಡಿಯಲ್ಲಿ ಸಿಗುವ ಪ್ರಮುಖ ಪ್ರಯೋಜನಗಳೆಂದರೆ…

  • ಆರ್ಥಿಕ ನೆರವು: ಡೈರಿ ಘಟಕಗಳನ್ನು ಸ್ಥಾಪಿಸಲು, ಹಾಲು ನೀಡುವ ಪ್ರಾಣಿಗಳನ್ನು (ಹಸು, ಎಮ್ಮೆ) ಖರೀದಿಸಲು, ಮತ್ತು ಮೇವು ಅಭಿವೃದ್ಧಿಪಡಿಸಲು ಆರ್ಥಿಕ ಸಹಾಯಧನ ದೊರೆಯುತ್ತದೆ.
  • ತರಬೇತಿ ಮತ್ತು ಬೆಂಬಲ: ಪ್ರಾಣಿಗಳ ನಿರ್ವಹಣೆ, ಆಹಾರ ಪದ್ಧತಿ, ಮತ್ತು ರೋಗ ನಿಯಂತ್ರಣದ ಬಗ್ಗೆ ರೈತರಿಗೆ ತರಬೇತಿ ನೀಡಲಾಗುತ್ತದೆ.
  • ಸಾಲ ಮತ್ತು ವಿಮಾ ರಕ್ಷಣೆ: ಪ್ರಾಣಿಗಳನ್ನು ಖರೀದಿಸಲು ತೆಗೆದುಕೊಂಡ ಸಾಲಗಳ ಮೇಲೆ ಬಡ್ಡಿ ಸಬ್ಸಿಡಿ ಮತ್ತು ಜಾನುವಾರುಗಳಿಗೆ ವಿಮಾ ರಕ್ಷಣೆಯೂ ದೊರೆಯುತ್ತದೆ.
  • ಮಾರುಕಟ್ಟೆ ಬೆಂಬಲ: ಸಹಕಾರಿ ಸಂಘಗಳ ಮೂಲಕ ಹಾಲು ಉತ್ಪಾದಕರಿಗೆ ಉತ್ತಮ ಬೆಲೆ ಮತ್ತು ಮಾರುಕಟ್ಟೆ ಪ್ರವೇಶಕ್ಕೆ ಸಹಾಯ ದೊರೆಯುತ್ತದೆ.

 

ಯೋಜನೆಯಡಿ ದೊರೆಯುವ ಆರ್ಥಿಕ ನೆರವು ಎಷ್ಟು?

ಯೋಜನೆ ಅಡಿಯಲ್ಲಿ, ಅರ್ಹ ಫಲಾನುಭವಿಗಳಿಗೆ ಎರಡು ಹಸು ಅಥವಾ ಎಮ್ಮೆಗಳನ್ನು ಖರೀದಿಸಲು ಗರಿಷ್ಠ 1.25 ಲಕ್ಷ ರೂ. ಅಥವಾ ಶೇ. 50% ಸಬ್ಸಿಡಿ ನೀಡಲಾಗುತ್ತದೆ.

ಪ್ರಮುಖ ಅರ್ಹತಾ ಮಾನದಂಡಗಳೇನು?

  • ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳ ವರ್ಗಗಳಿಗೆ ಸೇರಿದವರಾಗಿರಬೇಕು.
  • ಈ ಹಿಂದೆ ಇದೇ ಯೋಜನೆಯಡಿ ಸಬ್ಸಿಡಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರಲ್ಲ.
  • ಸರ್ಕಾರಿ ಅಥವಾ ಅರೆ ಸರ್ಕಾರಿ ನೌಕರಿಯಲ್ಲಿರುವ ಕುಟುಂಬದ ಸದಸ್ಯರು ಅರ್ಜಿ ಸಲ್ಲಿಸುವಂತಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಂದು?

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಎರಡು ಎಮ್ಮೆ ಅಥವಾ ಹಸುವನ್ನು ಖರೀದಿ ಮಾಡಲು ಸಹಾಯಹಧನವನ್ನು ಒದಗಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 10, 2025 ಆಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು:

  • ಆನ್‌ಲೈನ್ ಮೂಲಕ: ನೀವು ಸ್ವತಃ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
  • ಕೇಂದ್ರಗಳ ಮೂಲಕ: ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಸಹಾಯ ಪಡೆಯಬಹುದು.

ಆನ್‌ಲೈನ್ ಅರ್ಜಿ ಸಲ್ಲಿಸುವ ಹಂತಗಳು:

  • ಅಧಿಕೃತ ವೆಬ್‌ಸೈಟ್‌ https://swdcorp.karnataka.gov.in/ADCLPortal/schemedetail/DFS ಗೆ ಭೇಟಿ ನೀಡಿ.
  • ವೆಬ್‌ಸೈಟ್‌ನಲ್ಲಿ "ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ಮೊಬೈಲ್ ನಂಬರ್ ಮತ್ತು ಒಟಿಪಿ ಬಳಸಿ ಲಾಗಿನ್ ಆಗಿ.
  • ಅರ್ಜಿ ನಮೂನೆಯಲ್ಲಿ ಕೇಳಿದ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಕೊನೆಯಲ್ಲಿ "ಸಲ್ಲಿಸಿ" (Submit) ಬಟನ್ ಮೇಲೆ ಕ್ಲಿಕ್ ಮಾಡಿ.

ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್
  • ಪಾಸ್‌ಪೋರ್ಟ್ ಗಾತ್ರದ ಫೋಟೋ
  • ಬ್ಯಾಂಕ್ ಪಾಸ್ ಬುಕ್
  • ಜಾತಿ ಮತ್ತು ಆದಾಯ ಪ್ರಮಾಣಪತ್ರ
  • ರೇಷನ್ ಕಾರ್ಡ್
  • ಮೊಬೈಲ್ ನಂಬರ್

ಸಹಾಯವಾಣಿ

ಯಾವುದೇ ಹೆಚ್ಚಿನ ಮಾಹಿತಿ ಬೇಕಿದ್ದರೆ, ನೀವು ಸಹಾಯವಾಣಿ ಸಂಖ್ಯೆ 9482300400 ಅನ್ನು ಸಂಪರ್ಕಿಸಬಹುದು.

]]>
Mon, 05 Jan 2026 08:04:39 +0530 shivuagrico
Namma hola Namma Dari&ನಿಮ್ಮ ಜಮೀನಿಗೆ ಹೋಗಲು ಸರಿಯಾದ ರಸ್ತೆ ಇಲ್ಲವೇ? ಹಾಗಾದರೆ ಸರ್ಕಾರದಿಂದ ಸಿಗಲಿದೆ 12.5 ಲಕ್ಷ ರೂ. ಸಹಾಯಧನ https://krushirushi.in/Namma-hola-Namma-Dari-2370 https://krushirushi.in/Namma-hola-Namma-Dari-2370 Namma hola Namma Dari-ನಿಮ್ಮ ಜಮೀನಿಗೆ ಹೋಗಲು ಸರಿಯಾದ ರಸ್ತೆ ಇಲ್ಲವೇ? ಹಾಗಾದರೆ ಸರ್ಕಾರದಿಂದ ಸಿಗಲಿದೆ 12.5 ಲಕ್ಷ ರೂ. ಸಹಾಯಧನ

ಕರ್ನಾಟಕ ಸರ್ಕಾರವು "ನಮ್ಮ ಹೊಲ ನಮ್ಮ ದಾರಿ" ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಗ್ರಾಮೀಣ ರೈತರ ಜಮೀನುಗಳಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅನುದಾನವನ್ನು ಒದಗಿಸಲಾಗುತ್ತದೆ. ಇದರಿಂದ ಕೃಷಿ ಉತ್ಪನ್ನಗಳ ಸಾಗಾಣಿಕೆ ಸುಲಭವಾಗಲಿದ್ದು, ಸಾರಿಗೆ ವೆಚ್ಚ ತಗ್ಗಲಿದೆ. ಸ್ಥಳೀಯರಿಗೆ ಉದ್ಯೋಗಾವಕಾಶವೂ ದೊರೆಯಲಿದೆ. ಈ ಕುರಿತ ಸಮಗ್ರ ಮಾಹಿತಿ ಇಲ್ಲಿದೆ.

ಗ್ರಾಮೀಣ ಭಾಗದಲ್ಲಿ ರೈತರ ಬಳಿ ಜಮೀನು ಇದ್ದರೂ, ಅವುಗಳಿಗೆ ಹೋಗಲು ದಾರಿಯೇ ಇರುವುದಿಲ್ಲ. ಇದಕ್ಕಾಗಿ ಗಾಮಸ್ಥರ ಮಧ್ಯೆ ಜಗಳಗಳು, ಮನಸ್ಥಾಪಗಳು ನಡೆದಿದ್ದಿವೆ. ಇದಕ್ಕೆಲ್ಲಾ ಒಂದು ಪರಿಹಾರವನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ನಮ್ಮ ಹೊಲ ನಮ್ಮ ದಾರಿ ಎಂಬ ಯೋಜನೆಯನ್ನು ರೂಪಿಸಿದೆ. ರಾಜ್ಯದ ಗ್ರಾಮೀಣ ಪ್ರದೇಶದ ರೈತರಿಗೆ ನೇರವಾಗಿ ಅವರ ಹೊಲ, ಗದ್ದೆ, ತೋಟ ಮತ್ತು ಜಮೀನುಗಳಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸುವ ಮಹತ್ವಕಾಂಕ್ಷೆಯ ಯೋಜನೆಯೇ "ನಮ್ಮ ಹೊಲ ನಮ್ಮ ದಾರಿ". ಈ ಯೋಜನೆಯು ಕೃಷಿ ಉತ್ಪನ್ನಗಳ ಸಾಗಾಣಿಕೆ ಮತ್ತು ಗ್ರಾಮೀಣ ಮೂಲಸೌಕರ್ಯಗಳ ಸುಧಾರಣೆಗೆ ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಈ ಯೋಜನೆಯ ಮೂಲಕ ರೈತರು ತಮ್ಮ ಹೊಲಗಳಿಗೆ ಟ್ರ್ಯಾಕ್ಟರ್‌ಗಳನ್ನು ಒಯ್ಯಬಹುದಾದಷ್ಟು ದೊಡ್ಡದಾದ ದಾರಿಯನ್ನು ಮಾಡಿಕೊಳ್ಳಬಹುದಾಗಿದೆ.

ಏನಿದು ನಮ್ಮ ಹೊಲ ನಮ್ಮ ದಾರಿ ಯೋಜನೆ ?

"ನಮ್ಮ ಹೊಲ ನಮ್ಮ ದಾರಿ" ಎಂಬುದು ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಮಹತ್ವದ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದ ರೈತರ ಹೊಲ, ಗದ್ದೆ ಮತ್ತು ಜಮೀನುಗಳಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ, ಪ್ರತಿ ಕ್ಷೇತ್ರಕ್ಕೆ 30 ಕಿ.ಮೀ ನಂತೆ, ಒಟ್ಟಾರೆ 5670 ಕಿ.ಮೀ ರಸ್ತೆಯನ್ನು ಪ್ರತಿ ಕಿ.ಮೀಗೆ ರೂ. 12.50 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಗುರಿಯನ್ನು ಇದು ಹೊಂದಿದೆ. ಈ ಯೋಜನೆಗೆ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ರಾಜ್ಯ ಸರ್ಕಾರದ ಲೆಕ್ಕ ಶೀರ್ಷಿಕೆ 3054 ರ ಅನುದಾನಗಳನ್ನು ಒಗ್ಗೂಡಿಸಿ ಬಳಸಲಾಗುತ್ತಿದ್ದು, ಕೃಷಿ ಉತ್ಪನ್ನಗಳ ಮಾರುಕಟ್ಟೆ ಸಾಗಾಣಿಕೆ ವೆಚ್ಚ ತಗ್ಗಿಸುವಿಕೆ ಮತ್ತು ಗ್ರಾಮೀಣ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವಿಕೆ ಇದರ ಪ್ರಮುಖ ಪ್ರಯೋಜನಗಳಾಗಿವೆ.

ಯೋಜನೆಯ ಪ್ರಮುಖ ಅಂಶಗಳು

  • ರಸ್ತೆ ಸಂಪರ್ಕ: ರೈತರ ಹೊಲ/ಗದ್ದೆ/ತೋಟ/ಜಮೀನುಗಳಿಗೆ ನೇರ ರಸ್ತೆ ಸಂಪರ್ಕ ಒದಗಿಸುವುದು.
  • ಮಾರುಕಟ್ಟೆ ಸೌಲಭ್ಯ: ಬೆಳೆದ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸುಲಭವಾಗಿ ಮತ್ತು ವೇಗವಾಗಿ ಸಾಗಾಣಿಕೆ ಮಾಡಲು ಅನುಕೂಲ ಮಾಡಿಕೊಡುವುದು.
  • ಸಾರಿಗೆ ವೆಚ್ಚ ಕಡಿತ: ರೈತರ ಕೃಷಿ ಉತ್ಪನ್ನಗಳ ಸಾಗಾಣಿಕೆ ವೆಚ್ಚವನ್ನು ಗಣನೀಯವಾಗಿ ತಗ್ಗಿಸುವುದು.
  • ಸುರಕ್ಷಿತ ಸಂಚಾರ: ಸಾರ್ವಜನಿಕರು ಮತ್ತು ರೈತರಿಗೆ ಸುರಕ್ಷಿತ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವುದು.
  • ಉದ್ಯೋಗ ಸೃಷ್ಟಿ: ಗ್ರಾಮೀಣ ಜನತೆಗೆ ಉದ್ಯೋಗಾವಕಾಶ ಒದಗಿಸಿ, ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವುದು ಮತ್ತು ನಗರ ವಲಸೆಯನ್ನು ತಡೆಯುವುದು.
  • ಜೀವನಮಟ್ಟ ಸುಧಾರಣೆ: ಒಟ್ಟಾರೆಯಾಗಿ ಗ್ರಾಮೀಣ ಜನತೆಯ ಜೀವನಮಟ್ಟವನ್ನು ಸುಧಾರಿಸುವುದು.

ರೈತರಿಗೆ ಆಗುವ ಪ್ರಮುಖ ಲಾಭಗಳು

  • ಟ್ರ್ಯಾಕ್ಟರ್, ಜೀಪ್ ಮತ್ತು ಲೋಡಿಂಗ್ ವಾಹನಗಳು ನೇರವಾಗಿ ಹೊಲಕ್ಕೆ ತಲುಪಲು ಸಾಧ್ಯ.
  • ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸುವ ವೆಚ್ಚ ಗಣನೀಯವಾಗಿ ಕಡಿಮೆಯಾಗುತ್ತದೆ.
  • ಮಳೆಗಾಲದಲ್ಲಿ ಕೆಸರಿನಲ್ಲಿ ಸಿಲುಕುವ ಸಮಸ್ಯೆಗಳಿಗೆ ಪರಿಹಾರ.
  • ಎಂಜಿನರೇಗಾ ಮೂಲಕ ಸ್ಥಳೀಯ ಕಾರ್ಮಿಕರಿಗೆ ಉದ್ಯೋಗಾವಕಾಶ ಲಭ್ಯ.
  • ಬೆಳೆಯನ್ನು ಮಾರುಕಟ್ಟೆಗೆ ವೇಗವಾಗಿ ಕೊಂಡೊಯ್ಯಲು ಸಾಧ್ಯವಾಗುತ್ತದೆ.
  • ರಸಗೊಬ್ಬರ, ಬೀಜಗಳು ಮತ್ತು ಕೃಷಿ ಯಂತ್ರಗಳನ್ನು ಸುಲಭವಾಗಿ ಹೊಲಕ್ಕೆ ತರಲು ಸಾಧ್ಯ.
  • ರಾತ್ರಿ ಸಮಯದಲ್ಲೂ ಹೊಲಕ್ಕೆ ಸುರಕ್ಷಿತವಾಗಿ ತೆರಳಲು ಅವಕಾಶ.
  • ಗ್ರಾಮೀಣ ಸಂಪರ್ಕತೆ ಮತ್ತು ಮೂಲಸೌಕರ್ಯಗಳ ಸುಧಾರಣೆ.

ರಸ್ತೆಯನ್ನು ಮಾಡಿಸಲು ಅರ್ಹತಾ ಮಾನದಂಡಗಳೇನು?

  • ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ, ಕಂದಾಯ ಇಲಾಖೆಯ ಗ್ರಾಮ ನಕಾಶೆಯಲ್ಲಿ ಅದು 'ಸಾರ್ವಜನಿಕ ರಸ್ತೆ', 'ಬಂಡಿದಾರಿ', ಅಥವಾ 'ಕಾಲುದಾರಿ' ಎಂದು ಅಧಿಕೃತವಾಗಿ ಗುರುತಿಸಲ್ಪಟ್ಟಿರಬೇಕು.
  • ಕೇವಲ ಒಬ್ಬ ರೈತ ಬಳಸುವ ರಸ್ತೆಗಳ ಬದಲು, ಅತೀ ಹೆಚ್ಚು ಬಳಕೆಯಾಗುವ ಮತ್ತು ಅನೇಕ ರೈತರು ಅವಲಂಬಿತರಾಗಿರುವ ರಸ್ತೆಗಳನ್ನು ಮಾತ್ರ ಆಯ್ಕೆ ಮಾಡಬೇಕು.
  • ಆಯ್ಕೆ ಪ್ರಕ್ರಿಯೆಯಲ್ಲಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು (ಎಂಜಿನರೇಗಾ ತಾಲ್ಲೂಕು ಕಾರ್ಯಕ್ರಮ ಅಧಿಕಾರಿ) ಸಂಬಂಧಪಟ್ಟ ಶಾಸಕರೊಂದಿಗೆ ಸಮಾಲೋಚಿಸಿ ಅಗತ್ಯವಿರುವ ಕಾಮಗಾರಿಗಳನ್ನು ಗುರುತಿಸುತ್ತಾರೆ, ಮತ್ತು ಈ ವೇಳೆ ಕಂದಾಯ ಇಲಾಖೆ ಹಾಗೂ ಪಂಚಾಯತ್‌ ರಾಜ್‌ ಅಭಿಯಂತರ ಇಲಾಖೆ ಅಧಿಕಾರಿಗಳ ಅಭಿಪ್ರಾಯಗಳನ್ನು ಪರಿಗಣಿಸಲಾಗುತ್ತದೆ.
  • ಅಂತಿಮವಾಗಿ, ಆಯ್ಕೆಯಾದ ಕಾಮಗಾರಿಗಳಿಗೆ ಆಯಾ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯಲ್ಲಿ ಕಡ್ಡಾಯವಾಗಿ ಅನುಮೋದನೆ ಪಡೆದು, ಅದರ ನಂತರ ವಿಶೇಷ ಕ್ರಿಯಾ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತದೆ.
  • ಕಾರ್ಯಕ್ರಮ ಅನುಷ್ಠಾನದ ಎಲ್ಲಾ ಹಂತಗಳಲ್ಲೂ ಜನರ ಸಹಭಾಗಿತ್ವವನ್ನು ಅವಶ್ಯಕವಾಗಿ ತೊಡಗಿಸಿಕೊಳ್ಳಬೇಕು.

ಖಾಸಗಿ ಜಮೀನಿಗೆ ಸರ್ಕಾರದ ಷರತ್ತುಗಳೇನು?

  • ರಸ್ತೆ ನಿರ್ಮಾಣಕ್ಕೆ ಜಮೀನು ನೀಡುವ ಭೂ ಮಾಲೀಕರಿಗೆ ಸರ್ಕಾರದಿಂದ ಯಾವುದೇ ಭೂಸ್ವಾಧೀನ ಪರಿಹಾರ ಹಣ ನೀಡಲಾಗುವುದಿಲ್ಲ.
  • ಜಮೀನು ಮಾಲೀಕರು ಸ್ವ-ಇಚ್ಛೆಯಿಂದ ಉಪನೋಂದಣಾಧಿಕಾರಿ ಕಚೇರಿಯಲ್ಲಿ "ನೋಂದಾಯಿತ ದಾನ ಪತ್ರ" ಮೂಲಕ ಜಾಗವನ್ನು ಗ್ರಾಮ ಪಂಚಾಯಿತಿ ಹೆಸರಿಗೆ ನೋಂದಣಿ ಮಾಡಬೇಕು.
  • ರೈತರು ಜಮೀನು ನೀಡಲು ಒಪ್ಪದಿದ್ದರೆ, ಆ ರಸ್ತೆಯನ್ನು ಕೈಬಿಟ್ಟು ಬೇರೊಂದು ರಸ್ತೆಯನ್ನು ಆಯ್ಕೆ ಮಾಡಬೇಕು ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಒಂದು ಕಿ.ಮೀ. ರಸ್ತೆ ನಿರ್ಮಾಣಕ್ಕೆ 12.50 ಲಕ್ಷ ರೂ. ಅನುದಾನ

"ನಮ್ಮ ಹೊಲ ನಮ್ಮ ದಾರಿ" ಯೋಜನೆಯಡಿ ಪ್ರತಿ ಕಿ.ಮೀ ರಸ್ತೆ ನಿರ್ಮಾಣಕ್ಕೆ ನಿಗದಿಪಡಿಸಿದ ಒಟ್ಟು ರೂ. 12.50 ಲಕ್ಷ ವೆಚ್ಚವನ್ನು ಎರಡು ಅನುದಾನಗಳಡಿ ಹಂಚಿಕೆ ಮಾಡಲಾಗುತ್ತದೆ. ಅದರಲ್ಲಿ ಬಹುಪಾಲು, ಅಂದರೆ ರೂ. 9.00 ಲಕ್ಷ ವನ್ನು ಎಂಜಿನರೇಗಾ ಯೋಜನೆಯಡಿಯಲ್ಲಿ ಬಳಸಲಾಗುತ್ತದೆ, ಇದು ಮುಖ್ಯವಾಗಿ 3.75 ಮೀ ಅಗಲದ ರಸ್ತೆ ನಿರ್ಮಾಣದ ಕೆಲಸಗಳು, 1.00 ಕಿ.ಮೀ ಉದ್ದಕ್ಕೆ 0.075 ಮೀಟರ್ ದಪ್ಪದ ಗ್ರೇಡ್‌-2 ಮೆಟಲಿಂಗ್‌ ಮತ್ತು 0.400 ಕಿ.ಮೀ ಉದ್ದಕ್ಕೆ 0.075 ಮೀಟರ್ ದಪ್ಪದ ಗ್ರೇಡ್‌-3 ಮೆಟಲಿಂಗ್‌ ಕಾಮಗಾರಿಗಳನ್ನು ಒಳಗೊಂಡಿರುತ್ತದೆ; ಇನ್ನುಳಿದ ರೂ. 3.50 ಲಕ್ಷ ವನ್ನು ರಾಜ್ಯ ಸರ್ಕಾರದ ಲೆಕ್ಕ ಶೀರ್ಷಿಕೆ 3054 ರಡಿ ಮೀಸಲಿಡಲಾಗಿದ್ದು, ಇದು ರಸ್ತೆ ಕಾಮಗಾರಿಗಳಿಗೆ ಯಂತ್ರಗಳನ್ನು ಬಳಸುವ ಅಗತ್ಯವಿದ್ದಲ್ಲಿ ಆ ವೆಚ್ಚವನ್ನು ನಿರ್ವಹಿಸಲು ಅನುವು ಮಾಡಿಕೊಡುತ್ತದೆ.

ಅನುಷ್ಠಾನದ ಮಾರ್ಗಸೂಚಿಗಳೇನು?

  • ಕೂಲಿ ಮತ್ತು ಸಾಮಗ್ರಿಗಳ 60:40 ಅನುಪಾತವನ್ನು ಕಡ್ಡಾಯವಾಗಿ ಪಾಲಿಸುವುದು ಕಡ್ಡಾಯವಾಗಿದೆ.
  • ಅಕುಶಲ ಕೆಲಸವನ್ನು ಕೇವಲ ನೋಂದಾಯಿತ (ಉದ್ಯೋಗ ಚೀಟಿ ಹೊಂದಿದ) ಕೂಲಿಕಾರರಿಂದ ಮಾತ್ರ ನಿರ್ವಹಿಸಬೇಕು.
  • MGNREGA ಯೋಜನೆಯಡಿ ಅನುಮತಿಸಲಾದ ಯಂತ್ರಗಳನ್ನು ಹೊರತುಪಡಿಸಿ ಇತರೆ ಯಾವುದೇ ಯಂತ್ರಗಳನ್ನು ಬಳಸತಕ್ಕದ್ದಲ್ಲ. ಲೆಕ್ಕ ಶೀರ್ಷಿಕೆ 3054ರಡಿ ಮಾತ್ರ ಯಂತ್ರಗಳನ್ನು ಬಳಸಲು ಅವಕಾಶವಿದೆ.
  • ಕೇಂದ್ರ ಸರ್ಕಾರದ ಎಂಜಿನರೇಗಾ ಮಾರ್ಗಸೂಚಿಗಳು ಮತ್ತು KTPP ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
  • ಚಿಕ್ಕ ಸೇತುವೆಗಳು, ಮೋರಿಗಳಂತಹ ಸಂಪರ್ಕ ಸಾಧನಗಳನ್ನೂ ಕೈಗೆತ್ತಿಕೊಳ್ಳಬೇಕು ಮತ್ತು ಲಭ್ಯವಿರುವ ಇತರೆ ಯೋಜನೆಗಳ ಅನುದಾನಗಳೊಂದಿಗೆ (CSR, ಶಾಸಕರ ಅನುದಾನ, ಆರ್ಥಿಕ ದೇಣಿಗೆ) ಒಗ್ಗೂಡಿಸಬೇಕು.
  • ಅನುಷ್ಠಾನದ ಮೊದಲು, ಸಮಯದಲ್ಲಿ ಮತ್ತು ನಂತರದ ಹಂತಗಳಲ್ಲಿ ಕಾಮಗಾರಿಯ ಛಾಯಾಚಿತ್ರಗಳು ಮತ್ತು ಜಿಯೋ-ಟ್ಯಾಗ್ ಅನ್ನು NGSK ತಂತ್ರಾಂಶದಲ್ಲಿ ಕಡ್ಡಾಯವಾಗಿ ಅಳವಡಿಸಬೇಕು.

ನಿಮ್ಮ ಊರು/ತೋಟದ ರಸ್ತೆ ಮಂಜೂರು ಮಾಡಿಸುವುದು ಹೇಗೆ?

  • ಲಿಖಿತ ಮನವಿ ಸಲ್ಲಿಸಿ: ಮೊದಲು ನಿಮ್ಮ ಮತ್ತು ಅಕ್ಕಪಕ್ಕದ ರೈತರು ಒಟ್ಟಾಗಿ ಸೇರಿ, ರಸ್ತೆ ನಿರ್ಮಾಣದ ಅಗತ್ಯತೆಯನ್ನು ವಿವರಿಸುವ ಒಂದು ಲಿಖಿತ ಮನವಿಯನ್ನು ತಯಾರಿಸಿ. ಈ ಮನವಿಯನ್ನು ನಿಮ್ಮ ಗ್ರಾಮ ಪಂಚಾಯಿತಿಯ ಪಿಡಿಒ ಅವರಿಗೆ ಸಲ್ಲಿಸಿ, ರಸ್ತೆಯನ್ನು "ನಮ್ಮ ಹೊಲ ನಮ್ಮ ದಾರಿ" ಯೋಜನೆಯಡಿಯಲ್ಲಿ ಕೈಗೆತ್ತಿಕೊಳ್ಳುವಂತೆ ಕೋರಿ.
  • ಗ್ರಾಮ ಸಭೆಯಲ್ಲಿ ಅನುಮೋದನೆ ಪಡೆಯಿರಿ: ರಸ್ತೆ ಕಾಮಗಾರಿಯು ಗ್ರಾಮ ಸಭೆಯ ಅನುಮೋದನೆಯ ಮೂಲಕವೇ ಆರಂಭವಾಗುವುದರಿಂದ, ಗ್ರಾಮ ಸಭೆ ನಡೆದಾಗ ತಪ್ಪದೇ ಹಾಜರಾಗಿ, ಈ ರಸ್ತೆ ಕಾಮಗಾರಿಯ ವಿಷಯವನ್ನು ಪ್ರಸ್ತಾಪಿಸಿ ಮತ್ತು ಕಡ್ಡಾಯವಾಗಿ ಅನುಮೋದನೆ ಪಡೆದುಕೊಳ್ಳಿ.
  • ಶಾಸಕರ ಗಮನಕ್ಕೆ ತನ್ನಿ: ಈ ಯೋಜನೆಯಡಿ ರಸ್ತೆಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಶಾಸಕರ ಸಮಾಲೋಚನೆ ಮುಖ್ಯವಾಗಿರುವುದರಿಂದ, ನಿಮ್ಮ ಕ್ಷೇತ್ರದ ಶಾಸಕರಿಗೆ ವೈಯಕ್ತಿಕವಾಗಿ ಮನವಿ ಸಲ್ಲಿಸಿ, ನಿಮ್ಮ ರಸ್ತೆಯ ಮಂಜೂರಾತಿಗಾಗಿ ಒತ್ತಡ ಮತ್ತು ಪ್ರೋತ್ಸಾಹ ನೀಡಿ.
  • ಜಿಯೋ ಟ್ಯಾಗ್ ಮತ್ತು ಉಸ್ತುವಾರಿ: ಕಾಮಗಾರಿ ಆರಂಭವಾದ ನಂತರ, ರಸ್ತೆ ಕಾಮಗಾರಿಯ ಗುಣಮಟ್ಟ ಮತ್ತು ಪಾರದರ್ಶಕತೆಗಾಗಿ, ಕಾಮಗಾರಿ ಪ್ರಾರಂಭವಾಗುವ ಮೊದಲು, ಕಾಮಗಾರಿ ನಡೆಯುವಾಗ ಮತ್ತು ಪೂರ್ಣಗೊಂಡ ನಂತರ ಫೋಟೋ ತೆಗೆದು 'ಜಿಯೋ ಟ್ಯಾಗ್' ಮಾಡಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ (ಇದು ಅನುಷ್ಠಾನ ಮಾಡುವ ಅಧಿಕಾರಿಗಳ ಜವಾಬ್ದಾರಿಯಾದರೂ, ಸಾರ್ವಜನಿಕರೂ ಇದರ ಬಗ್ಗೆ ಗಮನ ಹರಿಸಬಹುದು).

]]>
Sun, 04 Jan 2026 07:56:37 +0530 shivuagrico
Free house scheme&ಆಶ್ರಯ ಮನೆ ಯೋಜನೆ ಅಡಿಯಲ್ಲಿ ಸ್ವಂತ ಮನೆ ನಿರ್ಮಾಣಕ್ಕೆ 2 ಲಕ್ಷ ರೂ.ವರೆಗೆ ಸಹಾಯಧನ: ಅರ್ಜಿ ಸಲ್ಲಿಸುವುದು ಹೇಗೆ? https://krushirushi.in/Free-house-scheme-2369 https://krushirushi.in/Free-house-scheme-2369 Free house scheme-ಆಶ್ರಯ ಮನೆ ಯೋಜನೆ ಅಡಿಯಲ್ಲಿ ಸ್ವಂತ ಮನೆ ನಿರ್ಮಾಣಕ್ಕೆ 2 ಲಕ್ಷ ರೂ.ವರೆಗೆ ಸಹಾಯಧನ: ಅರ್ಜಿ ಸಲ್ಲಿಸುವುದು ಹೇಗೆ?

ಬಡತನದಿಂದ ಬಳಲುತ್ತಿರುವ ಕುಟುಂಬಗಳಿಗೆ ಸ್ವಂತ ಸೂರು ಕಲ್ಪಿಸುವ ಮಹೋನ್ನತ ಉದ್ದೇಶದಿಂದ ಕರ್ನಾಟಕ ಸರ್ಕಾರ 'ಆಶ್ರಯ ವಸತಿ ಯೋಜನೆ' (ಇದನ್ನು 'ಬಸವ ವಸತಿ ಯೋಜನೆ' ಎಂದೂ ಕರೆಯಲಾಗುತ್ತದೆ) ಜಾರಿಗೆ ತಂದಿದೆ. ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಅನುಷ್ಠಾನಗೊಳ್ಳುತ್ತಿರುವ ಈ ಯೋಜನೆಯಡಿ, ಗ್ರಾಮೀಣ ಸಾಮಾನ್ಯ ವರ್ಗದವರಿಗೆ 1.20 ಲಕ್ಷ ರೂ. ಮತ್ತು ಪರಿಶಿಷ್ಟ ಜಾತಿ/ಪಂಗಡದವರಿಗೆ 1.75 ಲಕ್ಷ ರೂ.ಗಳ ಸಹಾಯಧನ ಲಭ್ಯವಿದೆ. ನಿಮ್ಮ ಕನಸಿನ ಮನೆಯ ನಿರ್ಮಾಣಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ನಿಮ್ಮ ಹಕ್ಕನ್ನು ಪಡೆದುಕೊಳ್ಳಿ. ಈ ಕುರಿತ ಮಾಹಿತಿಗಳು ಇಲ್ಲಿವೆ.

ಕರ್ನಾಟಕ ಸರ್ಕಾರವು ರಾಜ್ಯದ ಆರ್ಥಿಕವಾಗಿ ಹಿಂದುಳಿದ ಮತ್ತು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸ್ವಂತ ಮನೆ ನಿರ್ಮಿಸಿಕೊಡುವ ನಿಟ್ಟಿನಲ್ಲಿ 'ಆಶ್ರಯ ವಸತಿ ಯೋಜನೆ'ಯನ್ನು ಜಾರಿಗೆ ತಂದಿದೆ. ಇದನ್ನು ಜನಪ್ರಿಯವಾಗಿ ' ಬಸವ ವಸತಿ ಯೋಜನೆ ' ಎಂದೂ ಕರೆಯಲಾಗುತ್ತದೆ. ಈ ಯೋಜನೆಯನ್ನು ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಅನುಷ್ಠಾನಗೊಳಿಸುತ್ತಿದೆ.

ಏನಿದು ಆಶ್ರಯ ಮನೆ ಯೋಜನೆ ?

ಕರ್ನಾಟಕ ಸರ್ಕಾರದ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಮೂಲಕ ಅನುಷ್ಠಾನಗೊಳ್ಳುತ್ತಿರುವ 'ಆಶ್ರಯ ವಸತಿ ಯೋಜನೆ' (ಬಸವ ವಸತಿ ಯೋಜನೆ), ರಾಜ್ಯದ ನಿರಾಶ್ರಿತ ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸ್ವಂತ ಹಾಗೂ ಸುಭದ್ರವಾದ 'ಪಕ್ಕಾ' ಮನೆಗಳನ್ನು ಒದಗಿಸುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಈ ಯೋಜನೆಯು ಮುಖ್ಯವಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳನ್ನು ಗುರಿಯಾಗಿಸಿಕೊಂಡಿದೆ. ಸ್ವಂತ ನಿವೇಶನ ಹೊಂದಿರುವವರಿಗೆ ಮನೆ ನಿರ್ಮಾಣಕ್ಕೆ ಹಂತ-ಹಂತವಾಗಿ ಹಣ ಬಿಡುಗಡೆ ಮಾಡಲಾಗುವುದು ಅಥವಾ ಸರ್ಕಾರವೇ ಮನೆ ನಿರ್ಮಿಸಿಕೊಡಲಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲೂ ಈ ಸೌಲಭ್ಯಗಳನ್ನು ಸಂಯೋಜಿಸಲಾಗಿದ್ದು, ವಸತಿ ರಹಿತರಿಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ನೀಡುವುದು ಇದರ ಮೂಲ ಉದ್ದೇಶವಾಗಿದೆ.

ಯೋಜನೆಯ ಮುಖ್ಯ ಉದ್ದೇಶ

ವಸತಿ ರಹಿತರಿಗೆ ಮತ್ತು ಅತ್ಯಂತ ಕನಿಷ್ಠ ಸೌಕರ್ಯವಿರುವ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡಿ, ಪರಿಸರ ಸ್ನೇಹಿ ಹಾಗೂ ಸುಸ್ಥಿರವಾದ ಪಕ್ಕಾ ಮನೆಗಳನ್ನು ನಿರ್ಮಿಸುವುದು ಈ ಯೋಜನೆಯ ಮೂಲ ಗುರಿಯಾಗಿದೆ.

ಯೋಜನೆಯ ಪ್ರಮುಖ ಅಂಶಗಳು

  • ಸಾಮಾನ್ಯ ವರ್ಗ : ಗ್ರಾಮೀಣ ಪ್ರದೇಶದ ಫಲಾನುಭವಿಗಳಿಗೆ 1.20 ಲಕ್ಷ ರೂ.ಆರ್ಥಿಕ ಸಹಾಯ.
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ:ಗ್ರಾಮೀಣ ಪ್ರದೇಶದಲ್ಲಿ 1.75 ಲಕ್ಷ ರೂ. ಹಾಗೂ ನಗರ ಪ್ರದೇಶದಲ್ಲಿ 2 ಲಕ್ಷ ರೂ.ದವರೆಗೆ ಆರ್ಥಿಕ ಸಹಾಯಧನವನ್ನು ಒದಗಿಸುತ್ತದೆ.
  • ಮನೆಗಳ ವಿನ್ಯಾಸ: ಸರಿಸುಮಾರು 300 ಚದರ ಅಡಿ ವಿಸ್ತೀರ್ಣದ ಮನೆಗಳು, ನೀರು, ವಿದ್ಯುತ್ ಮತ್ತು ಒಳಚರಂಡಿ ವ್ಯವಸ್ಥೆಯಂತಹ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿರುತ್ತವೆ.
  • ಸಾಲ ಸೌಲಭ್ಯ: ಫಲಾನುಭವಿಗಳು ಸಾಲ ಪಡೆದರೆ, ವಾರ್ಷಿಕ 6.5% ಬಡ್ಡಿದರದಲ್ಲಿ ರಿಯಾಯಿತಿ ಸಿಗಲಿದೆ.

ಫಲಾನುಭವಿಗಳ ಮೀಸಲಾತಿ

ಕರ್ನಾಟಕ ಆಶ್ರಯ ವಸತಿ ಯೋಜನೆಯಲ್ಲಿ ಸಾಮಾಜಿಕ ನ್ಯಾಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಅರ್ಹ ಫಲಾನುಭವಿಗಳ ಆಯ್ಕೆಯಲ್ಲಿ ವ್ಯವಸ್ಥಿತ ಮೀಸಲಾತಿಯನ್ನು ಕಲ್ಪಿಸಲಾಗಿದೆ. ಇದರ ಅಡಿಯಲ್ಲಿ ಪರಿಶಿಷ್ಟ ಜಾತಿಗೆ ಶೇಕಡಾ 30ರಷ್ಟು, ಪರಿಶಿಷ್ಟ ಪಂಗಡಕ್ಕೆ ಶೇಕಡಾ 10ರಷ್ಟು ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಶೇಕಡಾ 10ರಷ್ಟು ಮನೆಗಳನ್ನು ಕಾಯ್ದಿರಿಸಲಾಗಿದೆ. ಈ ಮೀಸಲಾತಿಯ ಜೊತೆಗೆ ಸಮಾಜದ ಮುಖ್ಯವಾಹಿನಿಯಿಂದ ದೂರವಿರುವ ಅಥವಾ ಆರ್ಥಿಕ ಸಂಕಷ್ಟದಲ್ಲಿರುವ ವಿಧವೆಯರು, ವಿಕಲಚೇತನರು ಹಾಗೂ ತೃತೀಯ ಲಿಂಗಿಗಳಿಗೂ ಸಹ ವಿಶೇಷ ಆದ್ಯತೆಯ ಮೇಲೆ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದ್ದು, ಇದು ಸಮಾಜದ ಎಲ್ಲಾ ವರ್ಗದ ನಿರ್ಗತಿಕರಿಗೆ ಸಮಾನವಾಗಿ ಸ್ವಂತ ಮನೆಯ ಹಕ್ಕನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಅರ್ಹತಾ ಮಾನದಂಡಗಳು

  • ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು.
  • ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ತುಂಬಿರಬೇಕು.
  • ವಾರ್ಷಿಕ ಆದಾಯವು 3 ಲಕ್ಷ ರೂಪಾಯಿಗಳಿಗಿಂತ ಕಡಿಮೆ ಇರಬೇಕು.
  • ಅರ್ಜಿದಾರರು ಯಾವುದೇ ಪಕ್ಕಾ ಮನೆಯನ್ನು ಹೊಂದಿರಬಾರದು (ವಸತಿ ರಹಿತರಾಗಿರಬೇಕು).

ಇತರ ಸಂಯೋಜಿತ ಯೋಜನೆಗಳು

  • ಆಶ್ರಯ ಯೋಜನೆಯ ಜೊತೆಗೆ ಕರ್ನಾಟಕದಲ್ಲಿ ಇತರೆ ಕೆಲವು ಮುಖ್ಯ ವಸತಿ ಯೋಜನೆಗಳು ಕಾರ್ಯನಿರ್ವಹಿಸುತ್ತಿವೆ.
  • ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆ:ಎಸ್‌ಸಿ/ಎಸ್‌ಟಿ ಕುಟುಂಬಗಳಿಗಾಗಿ ವಿಶೇಷ ಯೋಜನೆ.
  • ದೇವರಾಜ್ ಅರಸು ವಸತಿ ಯೋಜನೆ: ನಿರ್ದಿಷ್ಟ ಹಿಂದುಳಿದ ವರ್ಗಗಳಿಗಾಗಿ.
  • ಮುಖ್ಯಮಂತ್ರಿಗಳ ಬಹುಮಹಡಿ ಬೆಂಗಳೂರು ವಸತಿ ಯೋಜನೆ: ಬೆಂಗಳೂರಿನಲ್ಲಿ 1 ಲಕ್ಷ ಮನೆಗಳ ನಿರ್ಮಾಣ.
  • ಮತ್ಸ್ಯ ಆಶ್ರಯ ಯೋಜನೆ: ಮೀನುಗಾರರಿಗಾಗಿ ಮೀಸಲಾದ ಯೋಜನೆ.

ಅರ್ಜಿ ಸಲ್ಲಿಸುವ ವಿಧಾನ

  • ಆಸಕ್ತರು ಆನ್‌ಲೈನ್ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದು ಅಥವಾ ಹತ್ತಿರದ ಬೆಂಗಳೂರು ಒನ್, ಗ್ರಾಮ ಪಂಚಾಯತ್ ಅಥವಾ ಬಿಬಿಎಂಪಿ ವಾರ್ಡ್ ಕಚೇರಿಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.
  • ಮೊದಲಿಗೆ, ಅರ್ಜಿದಾರರು ರಾಜೀವ್ ಗಾಂಧಿ ವಸತಿ ನಿಗಮದ ಅಧಿಕೃತ ಜಾಲತಾಣವಾದ ashraya.karnataka.gov.in ಗೆ ಭೇಟಿ ನೀಡಬೇಕು.
  • ಅಲ್ಲಿ ಅರ್ಜಿ ಸಲ್ಲಿಸುವ ಆಯ್ಕೆಯನ್ನು ಆರಿಸಿಕೊಂಡು, ತಮ್ಮ ಕ್ಷೇತ್ರ ಮತ್ತು ಪ್ರದೇಶವನ್ನು ಸರಿಯಾಗಿ ಆಯ್ಕೆ ಮಾಡಿಕೊಳ್ಳಬೇಕು.
  • ನಂತರ, ನಿಮ್ಮ ವಲಯ, ವಾರ್ಡ್ ಸಂಖ್ಯೆ, ಪ್ರಸ್ತುತ ವಿಳಾಸ ಮತ್ತು ಪಿನ್ ಕೋಡ್ ವಿವರಗಳನ್ನು ನಿಖರವಾಗಿ ನಮೂದಿಸಿ ಮುಂದಿನ ಹಂತಕ್ಕೆ ಹೋಗಬೇಕು.
  • ಮುಂದಿನ ಹಂತದಲ್ಲಿ, ನಿಮ್ಮ ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್‌ನಲ್ಲಿ ಇರುವಂತೆಯೇ ಹೆಸರನ್ನು ನಮೂದಿಸಬೇಕು.
  • ತದನಂತರ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿದಾಗ, ಆ ಚೀಟಿಯಲ್ಲಿರುವ ಕುಟುಂಬದ ಸದಸ್ಯರ ವಿವರಗಳು ಕಾಣಿಸುತ್ತವೆ; ಅಲ್ಲಿ ಯಾರ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕೋ ಅವರ ಹೆಸರಿನ ಮುಂದಿರುವ ಚೆಕ್ ಬಾಕ್ಸ್ ಅನ್ನು ಆರಿಸಿಕೊಳ್ಳಬೇಕು.
  • ಇದನ್ನು ಪೂರ್ಣಗೊಳಿಸಿದ ನಂತರ ಅರ್ಜಿದಾರರ ವೈಯಕ್ತಿಕ ವಿವರಗಳು ಹಾಗೂ ಜಾತಿ ಮತ್ತು ಆದಾಯ ಪ್ರಮಾಣಪತ್ರದ ಆರ್.ಡಿ ಸಂಖ್ಯೆಯನ್ನು ನಮೂದಿಸಬೇಕು.
  • ಅರ್ಜಿದಾರರು ಯಾವುದಾದರೂ ವಿಶೇಷ ಮೀಸಲಾತಿಯನ್ನು ಬಯಸಿದ್ದಲ್ಲಿ ಅದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಭರ್ತಿ ಮಾಡಬೇಕು.
  • ನಂತರ, ಜಿಲ್ಲೆಯಲ್ಲಿ ವಾಸವಿರುವ ಅವಧಿಯನ್ನು ನಮೂದಿಸಿ, ವಾಸಸ್ಥಳ ದೃಢೀಕರಣ ಪತ್ರದ ಆರ್.ಡಿ ಸಂಖ್ಯೆಯನ್ನು ಒದಗಿಸಬೇಕು.
  • ಅಂತಿಮವಾಗಿ ನಿಮ್ಮ ಉದ್ಯೋಗದ ಸ್ಥಿತಿಯನ್ನು ಆರಿಸಿಕೊಂಡು, ಎಲ್ಲಾ ವಿವರಗಳನ್ನು ಒಮ್ಮೆ ಮರುಪರಿಶೀಲಿಸಿ 'ಸೇವ್' ಬಟನ್ ಕ್ಲಿಕ್ ಮಾಡಬೇಕು.
  • ಈ ಹಂತದಲ್ಲಿ ನಿಮ್ಮ ಮೊಬೈಲ್ ಸಂಖ್ಯೆಗೆ ಬರುವ ಒ.ಟಿ.ಪಿ ಅನ್ನು ನಮೂದಿಸಿದ ನಂತರ, ಅರ್ಜಿಯು ಪೂರ್ಣಗೊಂಡು ಶುಲ್ಕ ಪಾವತಿಗಾಗಿ ಆನ್‌ಲೈನ್ ಅಥವಾ ಚಲನ್ ಪಾವತಿಯ ಪುಟಕ್ಕೆ ನಿರ್ದೇಶಿಸಲ್ಪಡುತ್ತದೆ. ನಿಮ್ಮ ಅರ್ಜಿಯ ಸ್ಥಿತಿಯ ಬಗ್ಗೆ ನಿಗಮದಿಂದ ಕಾಲಕಾಲಕ್ಕೆ ಮೊಬೈಲ್‌ಗೆ ಸಂದೇಶಗಳು ಬರಲಿವೆ.



ಆಯ್ಕೆ ಪ್ರಕ್ರಿಯೆ

ಅರ್ಜಿಗಳನ್ನು ಪರಿಶೀಲಿಸಿದ ನಂತರ, ಗ್ರಾಮ ಸಭೆ ಅಥವಾ ಸ್ಥಳೀಯ ಪ್ರಾಧಿಕಾರಗಳ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಫಲಾನುಭವಿಗಳ ಪಟ್ಟಿಯನ್ನು ಆಶ್ರಯ ಪೋರ್ಟಲ್‌ನಲ್ಲಿ ಪ್ರಕಟಿಸಲಾಗುತ್ತದೆ.

ಅಗತ್ಯವಿರುವ ದಾಖಲೆಗಳು

  • ಆಧಾರ್ ಕಾರ್ಡ್
  • ಆದಾಯ ಪ್ರಮಾಣ ಪತ್ರ (ಕಂದಾಯ ಇಲಾಖೆಯಿಂದ ಪಡೆದದ್ದು)
  • ಜಾತಿ ಪ್ರಮಾಣ ಪತ್ರ
  • ವಾಸಸ್ಥಳ ದೃಢೀಕರಣ ಪತ್ರ
  • ರೇಷನ್ ಕಾರ್ಡ್ (ಬಿಪಿಎಲ್‌ ಅಥವಾ ಅಂತ್ಯೋದಯ ಕಾರ್ಡ್)
  • ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
  • ಕಟ್ಟಡ ಕಾರ್ಮಿಕರಾಗಿದ್ದರೆ ಲೇಬರ್ ನೋಂದಣಿ ಸಂಖ್ಯೆ.

]]>
Sat, 03 Jan 2026 21:26:50 +0530 shivuagrico
e&NAM&ಇ&ನಾಮ್ ಯೋಜನೆಯಡಿ ಯಾವುದೇ ಮದ್ಯವರ್ತಿಗಳಿಲ್ಲದೇ ನೀವು ಬೆಳೆದ ಬೆಳೆಗಳನ್ನು ದೇಶದ ಯಾವುದೇ ಮೂಲೆಗೂ ಮಾರಬಹುದು https://krushirushi.in/e-NAM-2368 https://krushirushi.in/e-NAM-2368 e-NAM-ಇ-ನಾಮ್ ಯೋಜನೆ: ರೈತರ ಉತ್ಪನ್ನಗಳಿಗೆ ಡಿಜಿಟಲ್ ಮಂಡಿ; ಮಧ್ಯವರ್ತಿ ಇಲ್ಲದೆ ದೇಶಾದ್ಯಂತ ಮಾರುಕಟ್ಟೆ; ನೋಂದಣಿ ಹೇಗೆ? ಪ್ರಯೋಜನಗಳೇನು?


ರೈತರು ತಮ್ಮ ಬೆಳೆಗಳು ಹಾಗೂ ಉತ್ಪನ್ನಗಳಿಗೆ ಮಾರುಕಟ್ಟೆಯನ್ನು ಪಡೆಯುವುದು ಕಷ್ಟಕರ. ಅದರಲ್ಲೂ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದು ದೂರದ ಮಾತು. ಹೀಗಾಗಿ ಸರ್ಕಾರ ರೈತರಿಗೆ ಅನುಕೂಲ ಕಲ್ಪಿಸಲು ಇ-ರಾಷ್ಟ್ರೀಯ ಕೃಷಿ ಮಾರುಕಟ್ಟೆ ಯೋಜನೆಯನ್ನು ಪ್ರಾರಂಭಿಸಿದೆ. ಇ-ನಾಮ್‌ ಎಂತಲೂ ಇದನ್ನು ಕರೆಯಲಾಗುತ್ತದೆ. ಇದು ದೇಶಾದ್ಯಂತ ಇರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಂಡಿಗಳನ್ನು ಒಂದೇ ವೇದಿಕೆಯಡಿ ತರುವ ಆನ್‌ಲೈನ್ ವ್ಯಾಪಾರ ಪೋರ್ಟಲ್ ಆಗಿದೆ. ಹಾಗಿದ್ದರೆ ಏನಿದು ಇ- ನಾಮ್‌ ಯೋಜನೆ? ಇದರಿಂದ ರೈತರಿಗೆ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿಯೋಣ.

ಇ-ನಾಮ್‌ ಎಂದರೇನು?

ಇ-ನಾಮ್‌ ಯೋಜನೆಯು ಭಾರತದಾದ್ಯಂತ ಡಿಜಿಟಲ್ ವೇದಿಕೆಯನ್ನು ಕಲ್ಪಿಸಿಕೊಡುವ ಮೂಲಕ ರೈತರಿಗೆ ಪಾರದರ್ಶಕ ಮತ್ತು ನೈಜ ಸಮಯದ ಬೆಲೆ ನಿರ್ಧಾರದ ಸೌಲಭ್ಯವನ್ನು ಒದಗಿಸುತ್ತದೆ. ಇದರಿಂದಾಗಿ ಹೆಚ್ಚಿನ ಖರೀದಿದಾರರ ಸಂಪರ್ಕ ದೊರೆತು ಬೆಳೆಗಳಿಗೆ ಉತ್ತಮ ಬೆಲೆ ಸಿಗುವುದಲ್ಲದೆ, ಹಣವು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ. ಮಧ್ಯವರ್ತಿಗಳ ಹಾವಳಿ ಮತ್ತು ಮಾಹಿತಿಯ ಕೊರತೆಯನ್ನು ನೀಗಿಸುವ ಈ ವ್ಯವಸ್ಥೆಯು, ಖರೀದಿದಾರರು, ವ್ಯಾಪಾರಿಗಳು ಮತ್ತು ಸಂಸ್ಕಾರಣಾಕಾರರಿಗೆ ವಹಿವಾಟು ವೆಚ್ಚವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ, ಗುಣಮಟ್ಟದ ಪ್ರಮಾಣೀಕರಣ ಮತ್ತು ಸುಧಾರಿತ ಪೂರೈಕೆ ಸರಪಳಿ ನಿರ್ವಹಣೆಯ ಮೂಲಕ ಸಮಗ್ರ ಮಾರುಕಟ್ಟೆಯನ್ನು ಸೃಷ್ಟಿಸಿ, ಗ್ರಾಹಕರಿಗೆ ನ್ಯಾಯಯುತ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಕೃಷಿ ಉತ್ಪನ್ನಗಳು ದೊರೆಯುವಂತೆ ಮಾಡುತ್ತದೆ.

ಇ-ನ್ಯಾಮ್‌ನ ಪ್ರಮುಖ ಉದ್ದೇಶಗಳು

  • ಏಕೀಕೃತ ಮಾರುಕಟ್ಟೆ: ದೇಶದಾದ್ಯಂತ ಕೃಷಿ ವ್ಯಾಪಾರಕ್ಕಾಗಿ ಸಾಮಾನ್ಯ ಇ-ವೇದಿಕೆಯನ್ನು ನಿರ್ಮಿಸುವುದು.
  • ಪಾರದರ್ಶಕತೆ: ಇ-ಬಿಡ್ಡಿಂಗ್ ಮೂಲಕ ಬೆಲೆ ನಿರ್ಧಾರದಲ್ಲಿ ಪಾರದರ್ಶಕತೆ ತರುವುದು.
  • ಉತ್ತಮ ಬೆಲೆ: ರೈತರಿಗೆ ಹೆಚ್ಚಿನ ಖರೀದಿದಾರರ ಸಂಪರ್ಕ ಕಲ್ಪಿಸಿ, ಸ್ಪರ್ಧಾತ್ಮಕ ಬೆಲೆ ದೊರಕುವಂತೆ ಮಾಡುವುದು.
  • ಗುಣಮಟ್ಟ ಆಧಾರಿತ ವ್ಯಾಪಾರ: ವೈಜ್ಞಾನಿಕ ಗುಣಮಟ್ಟ ಪರೀಕ್ಷೆಯ ಆಧಾರದ ಮೇಲೆ ಹರಾಜು ಪ್ರಕ್ರಿಯೆ ನಡೆಸುವುದು.

ಪ್ರಮುಖ ವೈಶಿಷ್ಟ್ಯಗಳು ಮತ್ತು ಸೇವೆಗಳು

  • ಆನ್‌ಲೈನ್ ವ್ಯಾಪಾರ: ಈ ವೇದಿಕೆಯು ರೈತರು, ವ್ಯಾಪಾರಿಗಳು ಮತ್ತು ಕಮಿಷನ್ ಏಜೆಂಟ್‌ಗಳನ್ನು ಒಂದೇ ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ಜೋಡಿಸುವ ಮೂಲಕ ದೇಶಾದ್ಯಂತ ಪಾರದರ್ಶಕ ಕೃಷಿ ವ್ಯವಹಾರಕ್ಕೆ ಅವಕಾಶ ಮಾಡಿಕೊಡುತ್ತದೆ.
  • ಗುಣಮಟ್ಟ ಪರೀಕ್ಷೆ: ಉತ್ಪನ್ನಗಳಿಗೆ ಸರಿಯಾದ ಬೆಲೆ ಸಿಗುವಂತಾಗಲು, ಕೃಷಿ ಮಂಡಿಗಳಲ್ಲಿ ಕೃಷಿ ಉತ್ಪನ್ನಗಳ ಗುಣಮಟ್ಟವನ್ನು ಉಚಿತವಾಗಿ ಪರಿಶೀಲಿಸುವ 'ಅಸೇಯಿಂಗ್' ಸೌಲಭ್ಯವನ್ನು ನೀಡಲಾಗುತ್ತದೆ.
  • ಏಕೀಕೃತ ಪರವಾನಗಿ: ವ್ಯಾಪಾರಿಗಳು ರಾಜ್ಯದ ಪ್ರತಿಯೊಂದು ಮಂಡಿಗೂ ಪ್ರತ್ಯೇಕ ಪರವಾನಗಿ ಪಡೆಯುವ ಅಗತ್ಯವಿಲ್ಲ; ಒಂದು ಬಾರಿ ಪಡೆದ ಏಕೀಕೃತ ಪರವಾನಗಿಯ ಮೂಲಕ ರಾಜ್ಯದ ಎಲ್ಲಾ ಇ-ನಾಮ್‌ ಮಂಡಿಗಳಲ್ಲಿ ವ್ಯಾಪಾರ ಮಾಡಬಹುದು.
  • ನೇರ ನಗದು ವರ್ಗಾವಣೆ: ಮಾರಾಟ ಪ್ರಕ್ರಿಯೆ ಮುಗಿದ ನಂತರ, ಉತ್ಪನ್ನದ ಮೊತ್ತವು ಯಾವುದೇ ವಿಳಂಬವಿಲ್ಲದೆ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಇ-ಪಾವತಿ ಮೂಲಕ ಜಮೆಯಾಗುತ್ತದೆ.
  • ಮೊಬೈಲ್ ಆ್ಯಪ್‌: ಇ-ನ್ಯಾಮ್ ಮೊಬೈಲ್ ಅಪ್ಲಿಕೇಶನ್ ಬಳಸಿ ರೈತರು ತಮ್ಮ ಮೊಬೈಲ್‌ನಲ್ಲೇ ನೈಜ ಸಮಯದ ಮಾರುಕಟ್ಟೆ ದರಗಳು, ಉತ್ಪನ್ನಗಳ ಆಗಮನ ಮತ್ತು ತಮ್ಮ ವ್ಯವಹಾರದ ಸಂಪೂರ್ಣ ಮಾಹಿತಿಯನ್ನು ಸುಲಭವಾಗಿ ಪಡೆಯಬಹುದು.

ರೈತರಿಗೆ ಸಿಗುವ ಪ್ರಯೋಜನಗಳು:

  • ವ್ಯಾಪಕ ಮಾರುಕಟ್ಟೆ ಸಂಪರ್ಕ: ಇ-ನಾಮ್‌ ವೇದಿಕೆಯ ಮೂಲಕ ರೈತರು ಕೇವಲ ಸ್ಥಳೀಯ ಮಂಡಿಗಳಿಗೆ ಸೀಮಿತವಾಗದೆ, ದೇಶದಾದ್ಯಂತ ಇರುವ ಸಾವಿರಾರು ಖರೀದಿದಾರರೊಂದಿಗೆ ನೇರವಾಗಿ ಸಂಪರ್ಕ ಸಾಧಿಸಬಹುದು.
  • ಮಧ್ಯವರ್ತಿಗಳ ನಿರ್ಮೂಲನೆ: ಈ ವ್ಯವಸ್ಥೆಯು ಮಾರುಕಟ್ಟೆಯಲ್ಲಿನ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸುತ್ತದೆ ಮತ್ತು ಮಾರಾಟವಾದ ಉತ್ಪನ್ನದ ಹಣವು ಯಾವುದೇ ಕಡಿತವಿಲ್ಲದೆ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ.
  • ನೈಜ ಸಮಯದ ಮಾಹಿತಿ: ರೈತರು ಮಾರುಕಟ್ಟೆಗೆ ಹೋಗುವ ಮೊದಲೇ ವಿವಿಧ ಮಂಡಿಗಳಲ್ಲಿನ ಬೆಲೆಗಳ ಬಗ್ಗೆ ನೈಜ ಸಮಯದ ಮಾಹಿತಿಯನ್ನು ಪಡೆಯಬಹುದು. ಇದರಿಂದ ಅವರು ಸರಿಯಾದ ಸಮಯದಲ್ಲಿ ಮಾರಾಟದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ.
  • ಗುಣಮಟ್ಟ ಆಧಾರಿತ ಬೆಲೆ: ವೈಜ್ಞಾನಿಕ ಗುಣಮಟ್ಟ ಪರೀಕ್ಷೆಯ ಸೌಲಭ್ಯ ಇರುವುದರಿಂದ, ರೈತರು ತಾವು ಬೆಳೆದ ಉತ್ತಮ ಗುಣಮಟ್ಟದ ಉತ್ಪನ್ನಗಳಿಗೆ ತಕ್ಕಂತೆ ನ್ಯಾಯಯುತವಾದ ಮತ್ತು ಹೆಚ್ಚಿನ ಬೆಲೆಯನ್ನು ಪಡೆಯುತ್ತಾರೆ.

ವ್ಯಾಪಾರಿಗಳಿಗೆ ಸಿಗುವ ಪ್ರಯೋಜನಗಳು:

  • ಉತ್ಪನ್ನಗಳ ಲಭ್ಯತೆ: ವ್ಯಾಪಾರಿಗಳು ಒಂದೇ ವೇದಿಕೆಯ ಮೂಲಕ ದೇಶದ ವಿವಿಧ ಭಾಗಗಳಿಂದ ಬರುವ ಹೆಚ್ಚಿನ ಪ್ರಮಾಣದ ಮತ್ತು ವಿಭಿನ್ನ ಗುಣಮಟ್ಟದ ಕೃಷಿ ಉತ್ಪನ್ನಗಳನ್ನು ಸುಲಭವಾಗಿ ಖರೀದಿಸಬಹುದು.
  • ಕಡಿಮೆ ವಹಿವಾಟು ವೆಚ್ಚ: ಆನ್‌ಲೈನ್ ಹರಾಜು ಪ್ರಕ್ರಿಯೆ ಮತ್ತು ನೇರ ಖರೀದಿ ವ್ಯವಸ್ಥೆಯು ವ್ಯವಹಾರದಲ್ಲಿನ ಸಂಕೀರ್ಣತೆಯನ್ನು ಕಡಿಮೆ ಮಾಡಿ, ಒಟ್ಟಾರೆ ವಹಿವಾಟು ವೆಚ್ಚವನ್ನು ತಗ್ಗಿಸುತ್ತದೆ.
  • ಸುಲಭ ವ್ಯಾಪಾರ ಪ್ರಕ್ರಿಯೆ: ಏಕೀಕೃತ ಪರವಾನಗಿ ಸೌಲಭ್ಯವಿರುವುದರಿಂದ, ವ್ಯಾಪಾರಿಗಳು ರಾಜ್ಯದ ಯಾವುದೇ ಇ-ನಾಮ್‌ ಮಂಡಿಯಲ್ಲಾದರೂ ಕಾನೂನುಬದ್ಧವಾಗಿ ಮತ್ತು ಸುಲಭವಾಗಿ ವ್ಯಾಪಾರ ನಡೆಸಲು ಸಾಧ್ಯವಾಗುತ್ತದೆ.

ಇ-ನಾಮ್‌ ವ್ಯವಸ್ಥೆ ಹೇಗೆ ಕಾರ್ಯನಿರ್ವಹಿಸುತ್ತದೆ?

ಇ-ನಾಮ್‌ ಯೋಜನೆಯು ದೇಶಾದ್ಯಂತ ಇರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ಡಿಜಿಟಲ್ ವೇದಿಕೆಯ ಮೂಲಕ ಸಂಪರ್ಕಿಸುವ ಒಂದು ರಾಷ್ಟ್ರಮಟ್ಟದ ಏಕೀಕೃತ ಮಾರುಕಟ್ಟೆಯಾಗಿದೆ. ಈ ಪೋರ್ಟಲ್ ಆನ್‌ಲೈನ್ ಇ-ಹರಾಜಿನ ಮೂಲಕ ರೈತರು ತಮ್ಮ ಉತ್ಪನ್ನಗಳನ್ನು ದೇಶದ ಯಾವುದೇ ಮೂಲೆಯ ಖರೀದಿದಾರರಿಗೆ ನೇರವಾಗಿ ಮಾರಾಟ ಮಾಡಲು ಅವಕಾಶ ಕಲ್ಪಿಸುತ್ತದೆ. ಇದರಿಂದಾಗಿ ಪಾರದರ್ಶಕ ಬೆಲೆ ನಿರ್ಧಾರ ಸಾಧ್ಯವಾಗುವುದಲ್ಲದೆ ಮಧ್ಯವರ್ತಿಗಳ ಹಾವಳಿಯೂ ಕಡಿಮೆಯಾಗುತ್ತದೆ. ಅಲ್ಲದೆ, ಕೃತಕ ಬುದ್ಧಿಮತ್ತೆ ಆಧಾರಿತ ಗುಣಮಟ್ಟ ತಪಾಸಣೆ, ಏಕಗವಾಕ್ಷಿ ಸೇವೆಗಳು ಮತ್ತು ನೇರ ಇ-ಪಾವತಿ ಸೌಲಭ್ಯಗಳನ್ನು ಒದಗಿಸುವ ಮೂಲಕ ರೈತರಿಗೆ ಮಾರುಕಟ್ಟೆಯ ಸುಲಭ ಪ್ರವೇಶ ಹಾಗೂ ತಮ್ಮ ಬೆಳೆಗಳಿಗೆ ಉತ್ತಮ ಬೆಲೆ ಸಿಗುವಂತೆ ಈ ವ್ಯವಸ್ಥೆಯು ಖಚಿತಪಡಿಸುತ್ತದೆ.

ಅರ್ಹತೆ ಮತ್ತು ಮಾನದಂಡಗಳು

  • ರೈತರು: ವೈಯಕ್ತಿಕ ರೈತರು ತಮ್ಮ ಮೂಲಭೂತ ವೈಯಕ್ತಿಕ ವಿವರಗಳು ಮತ್ತು ಬ್ಯಾಂಕ್ ಖಾತೆಯ ಮಾಹಿತಿಯನ್ನು ಒದಗಿಸುವ ಮೂಲಕ ಈ ವೇದಿಕೆಯಲ್ಲಿ ಸುಲಭವಾಗಿ ನೋಂದಾಯಿಸಿಕೊಳ್ಳಬಹುದು.
  • ವ್ಯಾಪಾರಿಗಳು/ಖರೀದಿದಾರರು: ವ್ಯಾಪಾರದಲ್ಲಿ ಭಾಗವಹಿಸಲು ಇಚ್ಛಿಸುವವರು ಕಡ್ಡಾಯವಾಗಿ ಮಾನ್ಯತೆ ಪಡೆದ ವ್ಯಾಪಾರ ಪರವಾನಗಿ ಮತ್ತು ವ್ಯವಹಾರದ ನೋಂದಣಿ ದಾಖಲೆಗಳನ್ನು ( ಹೊಂದಿರಬೇಕು.
  • ಎಫ್‌ಪಿಒ /ಸಹಕಾರ ಸಂಘಗಳು: ಇವುಗಳು ಒಂದು ಸಾಮೂಹಿಕ ಸಂಸ್ಥೆಯಾಗಿ ನೋಂದಾಯಿಸಿಕೊಳ್ಳಬಹುದು. ಇದಕ್ಕಾಗಿ ಸಂಸ್ಥೆಯ ಅಧಿಕೃತ ನೋಂದಣಿ ಪತ್ರಗಳು ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಒದಗಿಸುವುದು ಅಗತ್ಯವಾಗಿರುತ್ತದೆ.
  • ರಾಜ್ಯ/ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳು: ತಮ್ಮ ವ್ಯಾಪ್ತಿಯ ಮಂಡಿಗಳನ್ನು ಇ-ನ್ಯಾಮ್‌ಗೆ ಸೇರಿಸಲು ಸರ್ಕಾರಗಳು ತಮ್ಮ ಎಪಿಎಂಸಿ ಕಾಯ್ದೆಯಲ್ಲಿ ಕೆಲವು ಪ್ರಮುಖ ಸುಧಾರಣೆಗಳನ್ನು ತರಬೇಕು. ಇವುಗಳಲ್ಲಿ ರಾಜ್ಯಾದ್ಯಂತ ಮಾನ್ಯತೆ ಇರುವ ಏಕೀಕೃತ ವ್ಯಾಪಾರ ಪರವಾನಗಿ ಮತ್ತು ಏಕ ಹಂತದ ಮಾರುಕಟ್ಟೆ ಶುಲ್ಕದ ಜಾರಿ ಕಡ್ಡಾಯವಾಗಿದೆ.

ನೋಂದಣಿ ಪ್ರಕ್ರಿಯೆ ಹೇಗೆ?

  • ಅಧಿಕೃತ ವೆಬ್‌ಸೈಟ್‌ enam.gov.in ಭೇಟಿ ನೀಡಿ 'ನೋಂದಣಿ' ಮೇಲೆ ಕ್ಲಿಕ್ ಮಾಡಿ.
  • 'ರೈತ' ಆಯ್ಕೆ ಮಾಡಿ ಮತ್ತು ನಿಮ್ಮ ಜಿಲ್ಲೆಯ APMC ಮಂಡಿಯನ್ನು ಆರಿಸಿ.
  • ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಮತ್ತು ವೈಯಕ್ತಿಕ ವಿವರ ನೀಡಿ.
  • ನಿಮ್ಮ ಇಮೇಲ್‌ಗೆ ಬಂದ ತಾತ್ಕಾಲಿಕ ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
  • ಬ್ಯಾಂಕ್ ವಿವರ ಮತ್ತು ಆಧಾರ್ ಮಾಹಿತಿಯನ್ನು ನವೀಕರಿಸಿ.
  • ಸಂಬಂಧಪಟ್ಟ APMC ನಿಮ್ಮ ವಿವರಗಳನ್ನು ಪರಿಶೀಲಿಸಿ ಅನುಮೋದಿಸಿದ ನಂತರ, ನಿಮಗೆ ಕಾಯಂ 'Farmer ID' ದೊರೆಯುತ್ತದೆ.

ವ್ಯಾಪಾರಿಗಳಿಗಾಗಿ

  • ವ್ಯಾಪಾರಿಗಳು ತಮ್ಮ ವ್ಯಾಪಾರ ಪರವಾನಗಿ ಮತ್ತು KYC ವಿವರಗಳೊಂದಿಗೆ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. APMC ಅನುಮೋದನೆಯ ನಂತರ ಅವರು ಆನ್‌ಲೈನ್ ಹರಾಜಿನಲ್ಲಿ ಭಾಗವಹಿಸಬಹುದು.

ರೈತ ಉತ್ಪಾದಕರ ಸಂಸ್ಥೆಗಳಿಗಾಗಿ

  • ರೈತ ಉತ್ಪಾದಕ ಸಂಸ್ಥೆಗಳು ತಮ್ಮ ಸಂಸ್ಥೆಯ ಹೆಸರು, ನೋಂದಣಿ ವಿವರಗಳು ಮತ್ತು ಬ್ಯಾಂಕ್ ಮಾಹಿತಿಯನ್ನು ನೀಡಿ ಪೋರ್ಟಲ್ ಅಥವಾ ಮೊಬೈಲ್ ಆಪ್ ಮೂಲಕ ನೋಂದಾಯಿಸಿಕೊಳ್ಳಬಹುದು.



ಅಗತ್ಯವಿರುವ ದಾಖಲೆಗಳು

  • ಆಧಾರ್ ಕಾರ್ಡ್.
  • ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ.
  • ಬ್ಯಾಂಕ್ ಪಾಸ್‌ಬುಕ್ ಪ್ರತಿ ಅಥವಾ ಕ್ಯಾನ್ಸಲ್ ಮಾಡಿದ ಚೆಕ್.
  • ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ.
  • ಜಮೀನಿನ ದಾಖಲೆಗಳು (ಪಹಣಿ) ಅಥವಾ ರೈತ ಗುರುತಿನ ಚೀಟಿ.

]]>
Sat, 03 Jan 2026 08:05:49 +0530 shivuagrico
Koli sakanike&ಕೋಳಿ ಸಾಕಾಣಿಕೆಗೆ 4.5 ಲಕ್ಷ ದಿಂದ 7.5 ಲಕ್ಷ ರೈತರ ಖಾತೆಗೆ ಜಮಾ https://krushirushi.in/Kukkata-Sanjeevini-yojane-2367 https://krushirushi.in/Kukkata-Sanjeevini-yojane-2367 Kukkata Sanjeevini yojane-500 ಕೋಳಿ ಸಾಕಾಣಿಕೆಗೆ 4.5 ಲಕ್ಷ ಸಹಾಯಧನ ಮತ್ತು 1000 ಕೋಳಿ ಸಾಕಾಣಿಕೆಗೆ 7.5ಲಕ್ಷ ಸಹಾಯಧನ


ಕೋಳಿ ಸಾಕಣೆ ಗ್ರಾಮೀಣ ಭಾಗದ ಜೀವನೋಪಾಯದ ಒಂದು ಭಾಗ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ನಾಟಿ ಕೋಳಿಗಳಿ ಹಾಗೂ ಅವುಗಳ ಮೊಟ್ಟೆಗಳಿಗೆ ಭಾರೀ ಬೇಡಿಕೆ ಸೃಷ್ಟಿಯಾಗಿದೆ. ಗ್ರಾಮೀಣ ಭಾಗದ ಮಹಿಳೆಯರಲ್ಲಿ ಕಕ್ಕುಟ ಉದ್ಯಮವನ್ನು ಪ್ರೋತ್ಸಾಹಿಸಲು ಸರ್ಕಾರ ಕುಕ್ಕುಟ ಸಂಜೀವಿನಿ ಯೋಜನೆ' ಯನ್ನು ಜಾರಿಗೊಳಿಸಿದೆ. ಈ ಯೋಜನೆಯು ಮಹಿಳಾ ಸ್ವಸಹಾಯ ಸಂಘಗಳು ಮತ್ತು ಗ್ರಾಮೀಣ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ, ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮತ್ತು ಪೌಷ್ಟಿಕಾಂಶದ ಕೊರತೆಯನ್ನು ನೀಗಿಸುವ ಬಹುಮುಖಿ ಉದ್ದೇಶಗಳನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಯೋಜನೆಯಡಿ ಏನೆಲ್ಲಾ ಸೌಲಭ್ಯಗಳು ಲಭ್ಯ? ಅವುಗಳನ್ನು ಪಡೆಯುವುದು ಹೇಗೆ ಎಂಬುದನ್ನು ತಿಳಿಯೋಣ.

ಏನಿದು ಕುಕ್ಕುಟ ಸಂಜೀವಿನಿ ಯೋಜನೆ?

ಕುಕ್ಕುಟ ಸಂಜೀವಿನಿ ಯೋಜನೆಯು 2024-25ರ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ ಒಂದು ಪ್ರಮುಖ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದ ಮಹಿಳಾ ಸ್ವಸಹಾಯ ಸಂಘಗಳ ಆರ್ಥಿಕ ಸಬಲೀಕರಣ ಮತ್ತು ಉದ್ಯೋಗಾವಕಾಶ ಸೃಷ್ಟಿಗೆ ಮೀಸಲಾಗಿದೆ. ಈ ಯೋಜನೆಯಡಿ, ಪಶುಸಂಗೋಪನಾ ಇಲಾಖೆಯಿಂದ ಆರು ವಾರಗಳ ನಾಟಿ ಕೋಳಿಮರಿಗಳನ್ನು ವಿತರಿಸಲಾಗುತ್ತದೆ ಮತ್ತು ಎಂಜಿನರೇಗಾ ಯೋಜನೆ ಅಡಿಯಲ್ಲಿ ಕೋಳಿ ಶೆಡ್‌ಗಳ ನಿರ್ಮಾಣಕ್ಕೆ (500 ಕೋಳಿಗಳಿಗೆ ಸುಮಾರು 4.5 ಲಕ್ಷ ರೂ.ಮತ್ತು 1000 ಕೋಳಿಗಳಿಗೆ ಸುಮಾರು 7.5 ಲಕ್ಷ ರೂ.) ಆರ್ಥಿಕ ನೆರವು ನೀಡಲಾಗುತ್ತದೆ. ಜೊತೆಗೆ ಪ್ರತಿ ಸಂಘಕ್ಕೆ 25,000 ರೂ. ಸಹಾಯಧನವೂ ದೊರೆಯುತ್ತದೆ. ಫಲಾನುಭವಿಗಳಿಗೆ ವೈಜ್ಞಾನಿಕ ಕೋಳಿ ಸಾಕಾಣಿಕೆ ಕುರಿತು ತರಬೇತಿ ಹಾಗೂ ತಾಂತ್ರಿಕ ಸಲಹೆಗಳನ್ನು ಒದಗಿಸಲಾಗುತ್ತದೆ. ಇಲ್ಲಿ ಉತ್ಪಾದನೆಯಾಗುವ ಮೊಟ್ಟೆಗಳನ್ನು ಸರ್ಕಾರಿ ಶಾಲೆಗಳ ಮಧ್ಯಾಹ್ನದ ಊಟ ಮತ್ತು ಸ್ಥಳೀಯ ಅಂಗನವಾಡಿ ಕೇಂದ್ರಗಳಿಗೆ ನಿಗದಿತ ದರದಲ್ಲಿ ಮಾರಾಟ ಮಾಡುವ ಮೂಲಕ ಸಂಘಗಳಿಗೆ ಸುಸ್ಥಿರ ಆದಾಯದ ಮಾರ್ಗವನ್ನು ಕಲ್ಪಿಸಲಾಗುತ್ತದೆ.

ಯೋಜನೆಯ ಮುಖ್ಯ ಉದ್ದೇಶಗಳು

  • ಆರ್ಥಿಕ ಸಬಲೀಕರಣ: ಗ್ರಾಮೀಣ ಮಹಿಳೆಯರಿಗೆ ಕೋಳಿ ಸಾಕಾಣಿಕೆ ಮೂಲಕ ಉದ್ಯೋಗಾವಕಾಶಗಳನ್ನು ಕಲ್ಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು.
  • ಲಿಂಗ ಸಮಾನತೆ: ಮಹಿಳಾ ಸ್ವಸಹಾಯ ಸಂಘಗಳಿಗೆ ನೆರವು ನೀಡುವ ಮೂಲಕ ಲಿಂಗ ಸಮಾನತೆಯನ್ನು ಸಾಧಿಸುವುದು.
  • ಪೌಷ್ಟಿಕಾಂಶದ ಭದ್ರತೆ: ಸರ್ಕಾರಿ ಮಧ್ಯಾಹ್ನದ ಊಟದ ಯೋಜನೆ ಮತ್ತು ಅಂಗನವಾಡಿಗಳಿಗೆ ಮೊಟ್ಟೆ ಮತ್ತು ಕೋಳಿ ಉತ್ಪನ್ನಗಳ ಬೇಡಿಕೆಯನ್ನು ಸ್ಥಳೀಯವಾಗಿ ಪೂರೈಸುವುದು.

ಯೋಜನೆಯಡಿ ದೊರೆಯುವ ಸೌಲಭ್ಯಗಳೇನು?

  • ಕುಕ್ಕುಟ ಸಂಜೀವಿನಿ ಯೋಜನೆಯ ಮುಖ್ಯ ಫಲಾನುಭವಿಗಳು 5 ರಿಂದ 10 ಸದಸ್ಯರನ್ನು ಹೊಂದಿರುವ ಮಹಿಳಾ ಸ್ವಸಹಾಯ ಸಂಘಗಳು ಮತ್ತು ಕೋಳಿ ಸಾಕಾಣಿಕೆಯಲ್ಲಿ ಆಸಕ್ತಿ ಹೊಂದಿರುವ ಗ್ರಾಮ ಪಂಚಾಯತ್ ಮಟ್ಟದ ಸಂಘಗಳಾಗಿವೆ.
  • ಈ ಯೋಜನೆಯಡಿ ಸಹಾಯದ ಸ್ವರೂಪವು ಬಹುಮುಖಿಯಾಗಿದೆ. ಪಶುಸಂಗೋಪನೆ ಇಲಾಖೆಯಿಂದ ಆರು ವಾರಗಳ ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುತ್ತದೆ.
  • ಕೋಳಿ ಶೆಡ್ ನಿರ್ಮಾಣಕ್ಕಾಗಿ ಎಂಜಿ ನರೇಗಾ ಯೋಜನೆ ಅಡಿಯಲ್ಲಿ 500 ಕೋಳಿಗಳಿಗೆ 4.5 ಲಕ್ಷ ರೂ. ಮತ್ತು 1000 ಕೋಳಿಗಳಿಗೆ 7.5 ಲಕ್ಷ ರೂ.ದವರೆಗೆ ಆರ್ಥಿಕ ನೆರವು ಒದಗಿಸಲಾಗುತ್ತದೆ.
  • ಇದರ ಜೊತೆಗೆ, ಪಶುಸಂಗೋಪನೆ ಇಲಾಖೆ ಅಥವಾ ಜಿಲ್ಲಾ ಪಂಚಾಯತ್‌ನಿಂದ ಪ್ರತಿ ಸಂಘಕ್ಕೆ 25,000 ರೂ.ಗಳ ಹೆಚ್ಚುವರಿ ಸಹಾಯಧನವನ್ನು ನೀಡಲಾಗುತ್ತದೆ.
  • ಯೋಜನೆಯ ಮೂಲಕ ಮಹಿಳಾ ಸಂಘಗಳಿಗೆ ಆದಾಯ ಹೆಚ್ಚಳಕ್ಕೆ ಉತ್ತಮ ಮಾರ್ಗಗಳನ್ನು ಕಲ್ಪಿಸಲಾಗಿದೆ.
  • ಉತ್ಪಾದನೆಯಾದ ಮೊಟ್ಟೆಗಳನ್ನು ಸರ್ಕಾರಿ ಶಾಲೆಗಳು ಮತ್ತು ಸ್ಥಳೀಯ ಅಂಗನವಾಡಿ ಕೇಂದ್ರಗಳಿಗೆ ನಿಗದಿತ ದರದಲ್ಲಿ ಮಾರಾಟ ಮಾಡಲು ಅವಕಾಶವಿದೆ. ಇದು ಸುಸ್ಥಿರ ಮಾರುಕಟ್ಟೆಯನ್ನು ಒದಗಿಸುತ್ತದೆ.

ಫಲಾನುಭವಿಗಳಿಗೆ ತರಬೇತಿ ಮತ್ತು ಮಾರ್ಗದರ್ಶನ

ಯಶಸ್ವಿ ಕೋಳಿ ಸಾಕಾಣಿಕೆಗಾಗಿ, ಫಲಾನುಭವಿಗಳಿಗೆ ಸಮಗ್ರ ತರಬೇತಿ ನೀಡಲಾಗುತ್ತದೆ. ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳದ ಪ್ರಾದೇಶಿಕ ಕೇಂದ್ರಗಳು ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಸಹಯೋಗದೊಂದಿಗೆ ಅಲ್ಪಾವಧಿ ವೈಜ್ಞಾನಿಕ ಕೋಳಿ ಸಾಕಾಣಿಕಾ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ. ಪಶುಪಾಲನಾ ಇಲಾಖೆಯಿಂದಲೂ ತರಬೇತಿ ಮತ್ತು ತಾಂತ್ರಿಕ ಸಲಹೆ ದೊರೆಯುತ್ತದೆ. ಸಾಮಾನ್ಯವಾಗಿ 5 ರಿಂದ 10 ದಿನಗಳವರೆಗೆ ತರಬೇತಿ ಇರುತ್ತದೆ. ಕೋಳಿಗಳ ಆರೈಕೆ, ಆಹಾರ ನೀಡುವ ವಿಧಾನ, ರೋಗ ನಿಯಂತ್ರಣ ಮತ್ತು ವೈಜ್ಞಾನಿಕ ಸಾಕಾಣಿಕೆ ಕುರಿತು ತಿಳಿವಳಿಕೆ ನೀಡಲಾಗುತ್ತದೆ.

ಕುಕ್ಕುಟ ಸಂಜೀವಿನಿ ಯೋಜನೆಯಡಿ ನೀಡಲಾಗುವ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ದಿನವೊಂದಕ್ಕೆ 200 ರೂ. ರಂತೆ ಭತ್ಯೆ ನೀಡಲಾಗುತ್ತದೆ. ಜೊತೆಗೆ ಪ್ರವಾಸ ವೆಚ್ಚ ಮತ್ತು ಲೇಖನಿ ಸಾಮಗ್ರಿಗಳಿಗಾಗಿ 800 ರೂ. ಅನುದಾನ ಹಾಗೂ ಕೋಳಿ ಸಾಕಾಣಿಕೆಯ ಕೈಪಿಡಿ ಮತ್ತು ಕಿಟ್ ವಿತರಣೆಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ತರಬೇತಿಗೆ ಮೊದಲು ಬಂದು ನೋಂದಾಯಿಸುವವರಿಗೆ ಆದ್ಯತೆ ನೀಡಲಾಗುತ್ತದೆ. ಆದರೆ ಕೋಳಿಮರಿಗಳನ್ನು (ವಿಶೇಷವಾಗಿ ಆರಂಭಿಕ 3-4 ತಿಂಗಳು) ಸೂಕ್ತವಾಗಿ ಪಾಲನೆ ಮಾಡಲು ಉತ್ತಮ ಪ್ರಾಯೋಗಿಕ ಅನುಭವ ಅವಶ್ಯಕವಿರುವುದರಿಂದ ನಾಟಿ ಕೋಳಿ ಮರಿಗಳನ್ನು ಸಾಕಿದ ಅನುಭವ ಇರುವವರು ಅರ್ಜಿ ಸಲ್ಲಿಸಿದರೆ ಉತ್ತಮ ಎಂಬ ಪ್ರಾಯೋಗಿಕ ಸಲಹೆಯನ್ನು ನೀಡಲಾಗಿದೆ.

, , , , , , , , , , , , , , , ,

]]>
Sat, 03 Jan 2026 07:25:28 +0530 shivuagrico
1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ&Dairy farming  https://krushirushi.in/Dairy-farming-2366 https://krushirushi.in/Dairy-farming-2366 1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming 

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು(Cow) ಅಥವಾ ಎಮ್ಮೆ(Buffelow) ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್‌ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.


ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Vetarnary department schemes 2025-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?

ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ


ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.

ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.


ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು

ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.


ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.


ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.

ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.


ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.

ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.


ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahvs.karnataka.gov.in/info-2/Schemes+&+Benefits/kn

National livestock mission 2024-ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆ,ಕುರಿ,ಕೋಳಿ,ಮೇಕೆ,ಹಂದಿ ಸಾಕಾಣೆಕೆಗೆ ಅರ್ಜಿ ಆಹ್ವಾನ

ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ, ಮೇಕೆ, ಹಂದಿ ಸಾಕಾಣಿಕೆ ಮತ್ತು ರಸಮೇವು ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.

National livestock mission 


ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ

(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)


 ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.


 ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.

ಅವಶ್ಯಕ ದಾಖಲಾತಿಗಳು :-

1)ಆಧಾರ,

2)ಪಹಣಿ ಪತ್ರ

3)ಬ್ಯಾಂಕ್‌ಖಾತೆ ಸಂಖ್ಯೆ,

ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು

4)ಭಾವ ಚಿತ್ರ.



ಕ್ರ.ಸಂ 

ಘಟಕ 

ಸೌಲಭ್ಯಗಳ ವಿವರ

 

 ಹೈನುಗಾರಿಕೆ 

 

1

ಮಿಶ್ರತಳಿ ದನಗಳ ನಿರ್ವಹಣೆ (1+1)

ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ

 

ಆ. ಸುಧಾರಿತ ಎಮ್ಮೆಗಳ ನಿರ್ವಹಣೆ 
 (1+1)

ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ

 

 ಕುರಿ ಸಾಕಾಣಿಕೆ 

 

2

ಕುರಿಗಳ ನಿರ್ವಹಣೆ (10+01)

 ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ

 

ಕುರಿಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ

 

ಟಗರುಗಳ ನಿರ್ವಹಣೆ (10)

ರೂ. 13,000 ರಂತೆ ಸಾಲ ಸೌಲಭ್ಯ

 

 ಟಗರುಗಳ ನಿರ್ವಹಣೆ (20)

ರೂ. 26,000 ರಂತೆ ಸಾಲ ಸೌಲಭ್ಯ

 

ಮೇಕೆ ಸಾಕಾಣಿಕೆ 

 

3

ಮೇಕೆಗಳ ನಿರ್ವಹಣೆ (10+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ

 

ಮೇಕೆಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ

4

ಹಂದಿ ಸಾಕಾಣಿಕೆ (10)

ರೂ,60,000 ರಂತೆ ಸಾಲ ಸೌಲಭ್ಯ

 

           ಕೋಳಿ ಸಾಕಾಣಿಕೆ 

 

5

ಮಾಂಸದ ಕೋಳಿ ಸಾಕಾಣಿಕೆ

2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ

 

 ಮೊಟ್ಟೆ ಕೋಳಿ ಸಾಕಾಣಿಕೆ

1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.

ಈ ಮಾಹಿತಿ ನಿಮಗೆ ಉಪಯೋಗವಾಗಿದ್ದರೆ ಬೇರೆಯವರಿಗೂ ಹಂಚಿಕೊಳ್ಳಿ ಧನ್ಯವಾದಗಳು

]]>
Fri, 02 Jan 2026 12:36:40 +0530 shivuagrico
Gruhalakshmi list&ಕೊನೆಗೂ ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಯ್ತು 2 ತಿಂಗಳ ಗೃಹಲಕ್ಷ್ಮಿ ಹಣ https://krushirushi.in/Gruhalakshmi-list-2365 https://krushirushi.in/Gruhalakshmi-list-2365 Gruhalakshmi list-ಕೊನೆಗೂ ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಯ್ತು 2 ತಿಂಗಳ ಗೃಹಲಕ್ಷ್ಮಿ ಹಣ

 ಈ ವಿಷಯವಾಗಿ ಮಾತನಾಡಿದ್ದಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕ‌ರ್ ಅವರು, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದಿದ್ದರು. 


ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.

ಅದರಂತೆ ಇಂದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ರೂ.4000  ಬಾಕಿ ಹಣವನ್ನು ಬ್ಯಾಂಕ್‌ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ. ಇಂದು ಅನೇಕ ಯಜಮಾನಿ ಮಹಿಳೆಯರ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗಿರುವುದಾಗಿ ತಿಳಿದು ಬಂದಿದೆ.


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Fri, 02 Jan 2026 08:24:24 +0530 shivuagrico
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ&pmkisan 22nd instalment ineligible list https://krushirushi.in/pmkisan-22nd-instalment-ineligible-list-2364 https://krushirushi.in/pmkisan-22nd-instalment-ineligible-list-2364 ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 22nd instalment ineligible list


ವರ್ಷದಲ್ಲಿ ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯ (ಪಿಎಂ-ಕಿಸಾನ್) ಫಲಾನುಭವಿಗಳ ಸಂಖ್ಯೆ(pmkisan 19th instalment ineligible list) ಐದು ಲಕ್ಷದಿಂದ ಆರು ಲಕ್ಷದಷ್ಟು ಕುಸಿತವಾಗಿದೆ.


ಲೋಕಸಭೆಯಲ್ಲಿ ಮೈಸೂರು ಸಂಸದ ಯದುವೀ‌ರ್ ಒಡೆಯ‌ರ್ ಮಂಗಳವಾರ ಕೇಳಿದ ಪ್ರಶ್ನೆಗೆ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್ ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ.


13ನೇ ಕಂತಿನವರೆಗೆ (2023ರ ಮಾರ್ಚ್) ರಾಜ್ಯದ ಫಲಾನುಭವಿಗಳ ಸಂಖ್ಯೆ 49 ಲಕ್ಷದಷ್ಟು ಇತ್ತು. 14ನೇ ಕಂತಿನಲ್ಲೂ ಫಲಾನುಭವಿಗಳ ಸಂಖ್ಯೆ 49.34 ಲಕ್ಷ ಆಗಿತ್ತು. 15ನೇ ಕಂತಿನಲ್ಲಿ ಈ ಸಂಖ್ಯೆ 43.78 ಲಕ್ಷಕ್ಕೆ ಕುಸಿಯಿತು. ಆ ಬಳಿಕ ಸಂಖ್ಯೆಯಲ್ಲಿ ಗಣನೀಯ ಏರಿಕೆ ಆಗಿಲ್ಲ.


ಪಿಎಂ- ಕಿಸಾನ್ ಯೋಜನೆಯಡಿ ಕೃಷಿಕರಿಗೆ ವಾರ್ಷಿಕ ₹6 ಸಾವಿರ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಈ ಮೊತ್ತವನ್ನು ₹8 ಸಾವಿರ ಅಥವಾ ₹12 ಸಾವಿರಕ್ಕೆ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Pmkisan 22nd instalment ineligible list-ಪಿಎಂ ಕಿಸಾನ್ 22ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Thu, 01 Jan 2026 07:44:33 +0530 shivuagrico
ಉಚಿತ ಹಾಲು ಕರೆಯುವ ಯಂತ್ರ,ರಬ್ಬರ್ ಮ್ಯಾಟ್,ಸೈಲೆಜ್ ಬ್ಯಾಗ್ ವಿತರಣೆಗೆ ಅರ್ಜಿ ಆಹ್ವಾನ&Vetarnary department subsidy schemes  https://krushirushi.in/Vetarnary-department-subsidy-schemes-2363 https://krushirushi.in/Vetarnary-department-subsidy-schemes-2363 ಉಚಿತ ಹಾಲು ಕರೆಯುವ ಯಂತ್ರ,ರಬ್ಬರ್ ಮ್ಯಾಟ್,ಸೈಲೆಜ್ ಬ್ಯಾಗ್ ವಿತರಣೆಗೆ ಅರ್ಜಿ ಆಹ್ವಾನ-Vetarnary department subsidy schemes 


2025-26ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿಯಲ್ಲಿ ಹಾಲು ಕರೆಯುವ ಯಂತ್ರ(Milking machine), ರಬ್ಬರ್ ನೆಲಹಾಸು(Rubber mat) ಹಾಗೂ ಸೈಲೇಜ್ ಬ್ಯಾಗ್ಗಳನ್ನು(Silage bag) ವಿತರಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ(Vetarnary department)ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಾಲು ಕರೆಯುವ ಯಂತ್ರ  ತಲಾ 1 ರಂತೆ, ರಬ್ಬರ್ ನೆಲಹಾಸು ತಲಾ 2 ರಂತೆ ಹಾಗೂ ಸೈಲೇಜ್ ಬ್ಯಾಗ್ ತಲಾ 100 ಕೆಜಿ ಸಾಮರ್ಥ್ಯದ 1 ಹಾಗೂ 500 ಕೆಜಿ ಸಾಮರ್ಥ್ಯದ 1 ಬ್ಯಾಗ್ ಅನ್ನು ನೀಡಲಾಗುತ್ತದೆ. ಸದರಿ ಫಲಾನುಭವಿಗಳ ಆಯ್ಕೆಯಲ್ಲಿ ರೋಸ್ಟರ್ ನಿಯಾಮಾನುಸಾರದ ಕ್ರಮ ವಹಿಸಲಿದ್ದು, ಆಸಕ್ತರು ತಮ್ಮ ಸ್ಥಳೀಯ ಪಶುವೈದ್ಯಾಧಿಕಾರಿಗಳಿಂದ/ಮುಖ್ಯ ಪಶುವೈದ್ಯಾಧಿಕಾರಿಗಳು ಇವರಿಂದ ಅರ್ಜಿ ನಮೂನೆಯನ್ನು ಪಡೆದು ಎಲ್ಲಾ ದಾಖಲಾತಿಗಳೊಂದಿಗೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮುಖ್ಯ ಪಶು ವೈದ್ಯಾಧಿಕಾರಿಗಳ ಈ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming 

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು(Cow) ಅಥವಾ ಎಮ್ಮೆ(Buffelow) ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್‌ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.


ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Vetarnary department schemes 2025-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?

ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ


ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.

ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.


ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು

ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.


ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.


ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.

ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.


ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.

ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.


ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahvs.karnataka.gov.in/info-2/Schemes+&+Benefits/kn

National livestock mission 2024-ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆ,ಕುರಿ,ಕೋಳಿ,ಮೇಕೆ,ಹಂದಿ ಸಾಕಾಣೆಕೆಗೆ ಅರ್ಜಿ ಆಹ್ವಾನ

ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ, ಮೇಕೆ, ಹಂದಿ ಸಾಕಾಣಿಕೆ ಮತ್ತು ರಸಮೇವು ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.

National livestock mission 


ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ

(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)


 ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.


 ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.

ಅವಶ್ಯಕ ದಾಖಲಾತಿಗಳು :-

1)ಆಧಾರ,

2)ಪಹಣಿ ಪತ್ರ

3)ಬ್ಯಾಂಕ್‌ಖಾತೆ ಸಂಖ್ಯೆ,

ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು

4)ಭಾವ ಚಿತ್ರ.



ಕ್ರ.ಸಂ 

ಘಟಕ 

ಸೌಲಭ್ಯಗಳ ವಿವರ

 

 ಹೈನುಗಾರಿಕೆ 

 

1

ಮಿಶ್ರತಳಿ ದನಗಳ ನಿರ್ವಹಣೆ (1+1)

ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ

 

ಆ. ಸುಧಾರಿತ ಎಮ್ಮೆಗಳ ನಿರ್ವಹಣೆ 
 (1+1)

ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ

 

 ಕುರಿ ಸಾಕಾಣಿಕೆ 

 

2

ಕುರಿಗಳ ನಿರ್ವಹಣೆ (10+01)

 ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ

 

ಕುರಿಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ

 

ಟಗರುಗಳ ನಿರ್ವಹಣೆ (10)

ರೂ. 13,000 ರಂತೆ ಸಾಲ ಸೌಲಭ್ಯ

 

 ಟಗರುಗಳ ನಿರ್ವಹಣೆ (20)

ರೂ. 26,000 ರಂತೆ ಸಾಲ ಸೌಲಭ್ಯ

 

ಮೇಕೆ ಸಾಕಾಣಿಕೆ 

 

3

ಮೇಕೆಗಳ ನಿರ್ವಹಣೆ (10+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ

 

ಮೇಕೆಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ

4

ಹಂದಿ ಸಾಕಾಣಿಕೆ (10)

ರೂ,60,000 ರಂತೆ ಸಾಲ ಸೌಲಭ್ಯ

 

           ಕೋಳಿ ಸಾಕಾಣಿಕೆ 

 

5

ಮಾಂಸದ ಕೋಳಿ ಸಾಕಾಣಿಕೆ

2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ

 

 ಮೊಟ್ಟೆ ಕೋಳಿ ಸಾಕಾಣಿಕೆ

1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.

ಈ ಮಾಹಿತಿ ನಿಮಗೆ ಉಪಯೋಗವಾಗಿದ್ದರೆ ಬೇರೆಯವರಿಗೂ ಹಂಚಿಕೊಳ್ಳಿ ಧನ್ಯವಾದಗಳು

]]>
Wed, 31 Dec 2025 20:41:50 +0530 shivuagrico
Pm kisan 22nd instalment&ಯಾರಿಗೆಲ್ಲಾ ಸಿಗಲಿದೆ ಪಿಎಂ ಕಿಸಾನ್ 22ನೇ ಕಂತು https://krushirushi.in/Pm-kisan-22nd-instalment-2362 https://krushirushi.in/Pm-kisan-22nd-instalment-2362 Pm kisan 22nd instalment-ಯಾರಿಗೆಲ್ಲಾ ಸಿಗಲಿದೆ ಪಿಎಂ ಕಿಸಾನ್ 22ನೇ ಕಂತು

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Wed, 31 Dec 2025 08:38:28 +0530 shivuagrico
Adhar pan link&ಆಧಾರ್ ಪ್ಯಾನ್ ಲಿಂಕ್ ಗೆ ಇಂದು ಕೊನೆಯ ದಿನಾಂಕ,ಲಿಂಕ್ ಆಗದಿದ್ದರೆ ರದ್ದಾಗಲಿದೆ ನಿಮ್ಮ ಪ್ಯಾನ್ ಕಾರ್ಡ್,ನಿಮ್ಮ ಸ್ಟೇಟಸ್ ಒಮ್ಮೆ ಚೆಕ್ ಮಾಡಿಕೊಂಡು ಬಿಡಿ https://krushirushi.in/Adhar-pan-link-2361 https://krushirushi.in/Adhar-pan-link-2361 ಆಧಾರ್ ಪ್ಯಾನ್ ಲಿಂಕ್ ಗೆ ಇಂದು ಕೊನೆಯ ದಿನಾಂಕ,ಲಿಂಕ್ ಆಗದಿದ್ದರೆ ರದ್ದಾಗಲಿದೆ ನಿಮ್ಮ ಪ್ಯಾನ್ ಕಾರ್ಡ್,ನಿಮ್ಮ ಸ್ಟೇಟಸ್ ಒಮ್ಮೆ ಚೆಕ್ ಮಾಡಿಕೊಂಡು ಬಿಡಿ


ಆಧಾರ್ ಕಾರ್ಡ್ ಲಿಂಕ್(Aadhaar card link) ಮಾಡಿಸದ ಸುಮಾರು 11.5 ಕೋಟಿ ಪ್ಯಾನ್ ಕಾರ್ಡ್ (pan card)ಗಳನ್ನು ನಿಷ್ಕ್ರಿಯ ಗೊಳಿಸಲಾಗಿದೆ ಎಂದು ಕೇಂದ್ರೀಯನೇರ ತೆರಿಗೆ ಮಂಡಳಿ (CBDT) ಮಾಹಿತಿ ಹಕ್ಕು (RTI) ನೀಡಿದ ಉತ್ತರದಲ್ಲಿ ಈ ವಿಷಯ ತಿಳಿಸಲಾಗಿದೆ.


ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್(Aadhaar pan link) ಮಾಡುವ ಗಡುವು ಈ ವರ್ಷದ ಆರಂಭದಲ್ಲಿ ಜೂನ್ 30 ರಂದು ಕೊನೆಗೊಂಡಿತು.

ಭಾರತದಲ್ಲಿ 70.24 ಕೋಟಿ ಪ್ಯಾನ್ ಕಾರ್ಡ್ ದಾರರಿದ್ದು, ಅವರಲ್ಲಿ 57.25 ಕೋಟಿ ಜನರು ತಮ್ಮ ಪ್ಯಾನ್ ಕಾರ್ಡ್ ಗಳನ್ನು ಆಧಾರ್ ನೊಂದಿಗೆ ಲಿಂಕ್ ಮಾಡಿದ್ದಾರೆ. 12 ಕೋಟಿಗೂ ಹೆಚ್ಚು ಪ್ಯಾನ್ ಕಾರ್ಡ್ಗಳನ್ನು (Pan card) ಆಧಾರ್ನೊಂದಿಗೆ(Aadhaar card) ಲಿಂಕ್ ಮಾಡಿಲ್ಲ, ಅದರಲ್ಲಿ 11.5 ಕೋಟಿ ಕಾರ್ಡ್ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಆರ್ಟಿಐ ಉತ್ತರದಲ್ಲಿ ತಿಳಿಸಲಾಗಿದೆ.

ಮಧ್ಯಪ್ರದೇಶ ಮೂಲದ ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ್ ಗೌರ್ ಅವರು ಆರ್ಟಿಐ ಅರ್ಜಿ ಸಲ್ಲಿಸಿದ್ದರು. ಪ್ಯಾನ್ ಕಾರ್ಡ್ನ ಹೊಸ ಅರ್ಜಿದಾರರಿಗೆ, ಅರ್ಜಿಯ ಹಂತದಲ್ಲಿ ಆಧಾರ್-ಪ್ಯಾನ್ ಲಿಂಕ್ ಅನ್ನು ಸ್ವಯಂಚಾಲಿತವಾಗಿ ಮಾಡಲಾಗುತ್ತದೆ. ಜುಲೈ 1, 2017 ರಂದು ಅಥವಾ ಅದಕ್ಕೂ ಮೊದಲು ಪ್ಯಾನ್ ಹಂಚಿಕೆಯಾದ ಅಸ್ತಿತ್ವದಲ್ಲಿರುವ ಪ್ಯಾನ್ ಹೊಂದಿರುವವರಿಗೆ, ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದೆ.

ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 139 ಎಎಯ ಉಪ-ಸೆಕ್ಷನ್ (2) ರ ಅಡಿಯಲ್ಲಿ, ಜುಲೈ 1, 2017 ರಂತೆ ಪ್ಯಾನ್ ಮಂಜೂರು ಮಾಡಿದ ಪ್ರತಿಯೊಬ್ಬ ವ್ಯಕ್ತಿಯು “ತನ್ನ ಆಧಾರ್ ಸಂಖ್ಯೆಯನ್ನು ತಿಳಿಸುವುದು” ಕಡ್ಡಾಯವಾಗಿದೆ ಎಂದು ಆರ್ಟಿಐ ಉತ್ತರದಲ್ಲಿ ಒತ್ತಿಹೇಳಲಾಗಿದೆ.

ಪ್ಯಾನ್ ಮತ್ತು ಆಧಾರ್ನ ಈ ಲಿಂಕ್ ಅನ್ನು ನಿಗದಿತ ದಿನಾಂಕದಂದು ಅಥವಾ ಅದಕ್ಕೂ ಮೊದಲು ಮಾಡಬೇಕಾಗಿತ್ತು, ಇಲ್ಲದಿದ್ದರೆ ಪ್ಯಾನ್ ನಿಷ್ಕ್ರಿಯಗೊಳ್ಳುತ್ತದೆ” ಎಂದು ಆರ್ಟಿಐ ಉತ್ತರದಲ್ಲಿ ತಿಳಿಸಲಾಗಿದೆ.

ಇದಲ್ಲದೆ, ಸೆಕ್ಷನ್ 234 ಎಚ್ ಪ್ರಕಾರ, ವ್ಯಕ್ತಿಯು ತನ್ನ ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡಬೇಕಾದ ವ್ಯಕ್ತಿಯು ನಿಗದಿತ ದಿನಾಂಕದಂದು ಅಥವಾ ಅದಕ್ಕೂ ಮೊದಲು ಅದನ್ನು ಮಾಡಲು ವಿಫಲವಾದರೆ, ಅವನು ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಪ್ಯಾನ್ ಕಾರ್ಡ್ ಅನ್ನು ಮತ್ತೆ ಸಕ್ರಿಯಗೊಳಿಸುವ ಸಲುವಾಗಿ, ಸಿಬಿಡಿಟಿ 1,000 ರೂ.ಗಳ ದಂಡವನ್ನು ವಿಧಿಸಿದೆ.

ನಿಮ್ಮ ಪಾನ್‌ಕಾರ್ಡ್‌ ಆಧಾರ್‌ನೊಂದಿಗೆ ಲಿಂಕ್‌ ಆಗಿದೆಯೇ ಅನ್ನೋದನ್ನು ತಿಳಿಯಲು ಈ ಕೆಳಗಿನಂತೆ ಫಾಲೋ ಮಾಡಿ

ಗೂಗಲ್‌ನಲ್ಲಿ www.incometax.gov.inವೆಬ್‌ಸೈಟ್ ಓಪನ್ ಮಾಡಿ, ನಂತರ "Link Aadhaar Status" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಪ್ಯಾನ್,ಆಧಾರ್ ನಂಬರ್ ಹಾಕಿ "View link Aadhaar status"ಮೇಲೆ ಕ್ಲಿಕ್ ಮಾಡಿ

ಈಗ ನಿಮ್ಮ ಪಾನ್‌ ಅನ್ನು ಆಧಾರ್ ಜೊತೆ ಲಿಂಕ್ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ದೃಢೀಕರಿಸುವ ಪುಟ ಕಾಣಿಸಿಕೊಳ್ಳುತ್ತದೆ.


ಪಾನ್‌ ಅನ್ನು ಆಧಾರ್ ಜೊತೆ ಲಿಂಕ್ ಮಾಡೋದು ಯಾಕೆ ಕಡ್ಡಾಯ?
2017ರ ಕೇಂದ್ರ ಬಜೆಟ್‌ನಲ್ಲಿ ಸರ್ಕಾರವು ಆದಾಯ ತೆರಿಗೆ ಕಾಯ್ದೆಯಲ್ಲಿ 139AA ಎಂಬ ಹೊಸ ಸೆಕ್ಷನ್‌ ತಂದಿದೆ. ಆ ಪ್ರಕಾರ ಹೊಸ ಪಾನ್‌ಗೆ ಅರ್ಜಿ ಸಲ್ಲಿಸುವಾಗ ಮತ್ತು ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸುವಾಗ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯವಾಗಿದೆ. ಹೀಗಾಗಿ ಇದಕ್ಕೂ ಮೊದಲೇ ಪಾನ್ ಕಾರ್ಡ್‌ ಹೊಂದಿದ್ದವರು ಸರ್ಕಾರ ನಿಗದಿ ಪಡಿಸಿದ ಸಮಯಕ್ಕೂ ಮೊದಲೇ ಆಧಾರ್ ಜೊತೆ ಲಿಂಕ್ ಮಾಡೋದು ಕಡ್ಡಾಯ. ಸರ್ಕಾರ ನಿಗದಿಪಡಿಸಿದ ಗಡುವಿನ ಒಳಗೆ ಲಿಂಕ್ ಮಾಡದಿದ್ದರೆ ಆ ಪಾನ್ ಕಾರ್ಡ್ ನಿಷ್ಕ್ರೀಯವಾಗಲಿದೆ.

]]>
Tue, 30 Dec 2025 16:37:28 +0530 shivuagrico
Horticulture department subsidy schemes 2026&ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳು https://krushirushi.in/Horticulture-department-subsidy-schemes-2026 https://krushirushi.in/Horticulture-department-subsidy-schemes-2026 Horticulture department subsidy schemes 2026-ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳು

ತೋಟಗಾರಿಕೆ ಇಲಾಖೆಯಿಂದ(Horticulture department schemes) ಸಣ್ಣ ಟ್ರ್ಯಾಕ್ಟ‌ರ್(Mini  tractor)
• ಡ್ರಾಗನ್ ಪೂಟ್(Dragon fruit), ಈರುಳ್ಳಿ ಶೇಖರಣಾ ಘಟಕಕ್ಕೆ (Onion storage)ಸಹಾಯಧನ
• ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ(green house) ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ  ನೀರುಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.


ಎಲ್ಲಿ ಅರ್ಜಿ ಸಲ್ಲಿಸಬೇಕು

ಆಸಕ್ತ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ (Horticulture department)ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ಅರ್ಜಿದಾರರ ಅಧಾರ್ ಕಾರ್ಡ್‌ ಪ್ರತಿ.
• ಬ್ಯಾಂಕ್‌ ಪಾಸ್ ಬುಕ್ ಪ್ರತಿ.
• ಪೋಟೋ.
• ಪಹಣಿ/ಉತಾರ್/RTC.
ರೇಷನ್ ಕಾರ್ಡ ಪ್ರತಿ.
ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.


ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM);

ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(Pradna mantri krishi sinchayi yojane);

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ(drip irrigation) ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್‍ರವರೆಗೆ ಶೇಕಡಾ 90%) ಸಹಾಯಧನ.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ (NAREGA)ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ(PMKVY) ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ(NHM) ಸಮುದಾಯ ಕೃಷಿಹೊಂಡ(Farm pond), ಕೃಷಿಹೊಂಡ, ಪ್ಯಾಕ್‌ಹೌಸ್(Pack house), ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್‌ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) (Fiber doti)ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


 ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾ‌ರ್ ಕಾರ್ಡ್ (Aadhaar card) ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ

https://horticulturedir.karnataka.gov.in/info-2/Facilities+available+to+farmers/kn



ಹೆಚ್ಚಿನ ಮಾಹಿತಿಗಾಗಿ  ತೋಟಗಾರಿಕೆ ಇಲಾಖೆ ಕಚೇರಿಯನ್ನು
ಸಂಪರ್ಕಿಸುವುದು. 

]]>
Tue, 30 Dec 2025 13:55:17 +0530 shivuagrico
Gram Panchayat subsidy scheme&2026ನೇ ಸಾಲಿನಲ್ಲಿ ಗ್ರಾಮ ಪಂಚಾಯತಿಯಲ್ಲಿ ಸಿಗುವ ಸಬ್ಸಿಡಿ ಯೋಜನೆಗಳ ಪಟ್ಟಿ ಬಿಡುಗಡೆ https://krushirushi.in/Gram-Panchayat-subsidy-scheme-2026 https://krushirushi.in/Gram-Panchayat-subsidy-scheme-2026 Gram Panchayat subsidy scheme-2026ನೇ ಸಾಲಿನಲ್ಲಿ ಗ್ರಾಮ ಪಂಚಾಯತಿಯಲ್ಲಿ ಸಿಗುವ ಸಬ್ಸಿಡಿ ಯೋಜನೆಗಳ ಪಟ್ಟಿ ಬಿಡುಗಡೆ

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತ್‌ಗಳು ಅತ್ಯಂತ ಕೆಳಹಂತದ ಅತಿ ಪ್ರಮುಖವಾದ ಆಡಳಿತಾತ್ಮಕ ಘಟಕಗಳಾಗಿವೆ. "ಗ್ರಾಮ ಸ್ವರಾಜ್ಯ"ದ ಕನಸನ್ನು ನನಸು ಮಾಡುವಲ್ಲಿ ಕರ್ನಾಟಕದ ಗ್ರಾಮ ಪಂಚಾಯತ್‌ಗಳು ನಿರ್ಣಾಯಕ ಪಾತ್ರ ವಹಿಸುತ್ತಿವೆ. ಗ್ರಾಮ ಪಂಚಾಯತಿಗಳು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿವೆ. ಜನರು ಸರ್ಕಾರದ ಅನೇಕ ಯೋಜನೆಗಳಿಗೆ ಗ್ರಾಮ ಪಂಚಾಯತ್‌ಗಳ ಮೂಲಕವೇ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಮೂಲಕ ದೊರೆಯುವ ಸೌಲಭ್ಯಗಳು, ಯೋಜನೆಗಳು ಮತ್ತು ಅವುಗಳನ್ನು ಪಡೆಯುವ ವಿಧಾನಗಳ ಬಗ್ಗೆ ತಿಳಿಯೋಣ.

ಗ್ರಾಮೀಣ ಭಾಗದ ಜನರಿಗೆ ಆರ್ಥಿಕ ಭದ್ರತೆ ಮತ್ತು ಗೌರವಯುತ ಜೀವನೋಪಾಯವನ್ನು ಕಲ್ಪಿಸುವಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಜಿನರೇಗಾ) ಅಥವಾ ವಿಕಸಿತ ಭಾರತ ಜಿ ರಾಮ್‌ ಜಿ ಯೋಜನೆ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ.

ಈ ಯೋಜನೆಯ ಅಡಿಯಲ್ಲಿ ಪ್ರತಿ ಗ್ರಾಮೀಣ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ 125 ದಿನಗಳ ದೈಹಿಕ ಶ್ರಮದ ಉದ್ಯೋಗದ ಖಾತರಿಯನ್ನು ಸರ್ಕಾರ ನೀಡುತ್ತದೆ.

ವಸತಿ ಯೋಜನೆಗಳು

ಬಸವ ವಸತಿ ಯೋಜನೆ: ಸಾಮಾನ್ಯ ವರ್ಗಕ್ಕೆ ಸೇರಿದ ಆರ್ಥಿಕವಾಗಿ ಹಿಂದುಳಿದ ವಸತಿ ರಹಿತ ಕುಟುಂಬಗಳಿಗೆ ಈ ಯೋಜನೆಯಡಿ ಮನೆ ನಿರ್ಮಿಸಲು ಆರ್ಥಿಕ ನೆರವು ನೀಡಲಾಗುತ್ತದೆ.

ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಮನೆ ನಿರ್ಮಿಸಿಕೊಳ್ಳಲು ಈ ಯೋಜನೆಯ ಮೂಲಕ ವಿಶೇಷ ಆದ್ಯತೆ ಮತ್ತು ಧನಸಹಾಯ ನೀಡಲಾಗುತ್ತದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ): ಕೇಂದ್ರ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದವರಿಗೆ ಪಕ್ಕಾ ಮನೆ ನಿರ್ಮಿಸಲು ಸಬ್ಸಿಡಿ ಮತ್ತು ಸುಲಭ ಸಾಲದ ಸೌಲಭ್ಯವನ್ನು ಒದಗಿಸಲಾಗುತ್ತದೆ.

ಫಲಾನುಭವಿಗಳ ಆಯ್ಕೆ: ಈ ಎಲ್ಲಾ ಯೋಜನೆಗಳಿಗೆ ಅರ್ಹರಾದ ಫಲಾನುಭವಿಗಳನ್ನು ಗ್ರಾಮ ಸಭೆಯ ಮೂಲಕ ಅತ್ಯಂತ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತದೆ.

ಸಾಮಾಜಿಕ ಭದ್ರತೆ,ಪಿಂಚಣೆ ಯೋಜನೆಗಳು

ವೃದ್ಧಾಪ್ಯ ಪಿಂಚಣಿ: 60 ವರ್ಷ ದಾಟಿದ ಹಿರಿಯ ನಾಗರಿಕರು ತಮ್ಮ ಸಂಧ್ಯಾಕಾಲದ ಜೀವನವನ್ನು ನೆಮ್ಮದಿಯಿಂದ ಕಳೆಯಲು ಈ ಯೋಜನೆಯಡಿ ಮಾಸಿಕ ಪಿಂಚಣಿ ಪಡೆಯಬಹುದು.

ವಿಧವಾ ಪಿಂಚಣಿ: ಪತಿಯನ್ನು ಕಳೆದುಕೊಂಡು ಜೀವನೋಪಾಯಕ್ಕೆ ಕಷ್ಟಪಡುತ್ತಿರುವ ಮಹಿಳೆಯರಿಗೆ ಗೌರವಯುತ ಜೀವನ ನಡೆಸಲು ಈ ಯೋಜನೆಯು ಆರ್ಥಿಕ ನೆರವು ನೀಡುತ್ತದೆ.

ಅಂಗವಿಕಲ ಪಿಂಚಣಿ: ಶೇಕಡಾ 40 ಕ್ಕಿಂತ ಹೆಚ್ಚು ದೈಹಿಕ ಅಥವಾ ಮಾನಸಿಕ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಅವರ ದೈನಂದಿನ ಜೀವನ ನಿರ್ವಹಣೆಗಾಗಿ ಈ ಪಿಂಚಣಿ ಸೌಲಭ್ಯ ಒದಗಿಸಲಾಗುತ್ತದೆ.

ಮನಸ್ವಿನಿ ಯೋಜನೆ: ಸಮಾಜದಲ್ಲಿನ ವಿಶೇಷ ವರ್ಗಗಳಾದ ಅವಿವಾಹಿತ ಅಥವಾ ವಿಚ್ಛೇದಿತ ಮಹಿಳೆಯರಿಗೆ ಆರ್ಥಿಕ ಭದ್ರತೆ ನೀಡಲು ಈ ವಿಶೇಷ ಯೋಜನೆಯನ್ನು ರೂಪಿಸಲಾಗಿದೆ.

ಮಹಿಳಾ ಸ್ವಸಹಾಯ ಗುಂಪುಗಳು: ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸ್ವಸಹಾಯ ಗುಂಪುಗಳನ್ನು ರಚಿಸಲಾಗುತ್ತಿದ್ದು, ಇವುಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ ಸಾಲದ ಸೌಲಭ್ಯವನ್ನು ಒದಗಿಸಲಾಗುತ್ತದೆ.

ಕೌಶಲ್ಯಾಭಿವೃದ್ಧಿ: ಮಹಿಳೆಯರು ಸ್ವಂತ ಉದ್ಯಮ ಆರಂಭಿಸಲು ಪ್ರೋತ್ಸಾಹ ನೀಡಲು ವಿವಿಧ ರೀತಿಯ ಉದ್ಯಮಶೀಲತೆ ಮತ್ತು ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಅಂಗನವಾಡಿ ಸೇವೆಗಳು: ಗ್ರಾಮದ ಪುಟ್ಟ ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯ ಕಾಪಾಡಲು ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಟಿಕ ಆಹಾರ ಮತ್ತು ನಿಯಮಿತ ಆರೋಗ್ಯ ತಪಾಸಣೆಯನ್ನು ಒದಗಿಸಲಾಗುತ್ತದೆ.

ಡಿಜಿಟಲ್ ಪಂಚಾಯತ್ ವ್ಯವಸ್ಥೆ
ಪಂಚತಂತ್ರ 2.0 ಪೋರ್ಟಲ್: ಸುಧಾರಿತ ಪಂಚತಂತ್ರ 2.0 ಪೋರ್ಟಲ್ ಮೂಲಕ ಗ್ರಾಮಸ್ಥರು ತಮ್ಮ ಆಸ್ತಿ ತೆರಿಗೆಯನ್ನು ಕಚೇರಿಗೆ ಅಲೆಯದೆ ಮನೆಯಲ್ಲೇ ಕುಳಿತು ಪಾವತಿಸಬಹುದು.

ಇ-ಖಾತಾ ಸೌಲಭ್ಯ: ಗ್ರಾಮ ಪಂಚಾಯತ್ ವ್ಯಾಪ್ತಿಯ ಆಸ್ತಿ ತೆರಿಗೆ ಸಂಗ್ರಹ ಮತ್ತು ನೋಂದಣಿಗೆ ಅತ್ಯಗತ್ಯವಾಗಿರುವ ನಮೂನೆ-9 (ಎ ಖಾತಾ) ಮತ್ತು ನಮೂನೆ-11ಬಿ (ಕೃಷಿಯೇತರ ಆಸ್ತಿ ನೋಂದಣಿ ಪುಸ್ತಕ) ನಂತಹ ಪ್ರಮುಖ ಆಸ್ತಿ ದಾಖಲೆಗಳನ್ನು ಪಂಚತಂತ್ರ ತಂತ್ರಾಂಶದ ಮೂಲಕ ನಿರ್ವಹಿಸಿ ಸಾರ್ವಜನಿಕರಿಗೆ ವಿತರಿಸಲಾಗುತ್ತದೆ.

ಪರವಾನಗಿಗಳ ಸಲ್ಲಿಕೆ: ಕಟ್ಟಡ ನಿರ್ಮಾಣ ಅಥವಾ ಹೊಸ ವ್ಯಾಪಾರ ಆರಂಭಿಸಲು ಬೇಕಾದ ಪರವಾನಗಿಗಳಿಗಾಗಿ ಈಗ ಡಿಜಿಟಲ್ ಆಗಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಜಾರಿಯಲ್ಲಿದೆ.


ಪ್ರಮುಖ ದಾಖಲೆಗಳು: ಜನನ-ಮರಣ ಪ್ರಮಾಣ ಪತ್ರಗಳು, ವಾಸಸ್ಥಳ ದೃಢೀಕರಣ ಪತ್ರಗಳು ಮತ್ತು ಪಹಣಿಯಂತಹ ಪ್ರಮುಖ ದಾಖಲೆಗಳನ್ನು ಆನ್‌ಲೈನ್ ಮೂಲಕವೇ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯೋಜನೆಯ ಲಾಭ ಪಡೆಯುವುದು ಹೇಗೆ?

ಗ್ರಾಮ ಪಂಚಾಯತ್ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಗ್ರಾಮ ಸಭೆಯಲ್ಲಿ ಭಾಗವಹಿಸಿ. ಪಂಚಾಯತ್ ವರ್ಷಕ್ಕೆ ಕನಿಷ್ಠ ಎರಡು ಬಾರಿ ನಡೆಸುವ ಗ್ರಾಮ ಸಭೆಯಲ್ಲಿ ಯೋಜನೆಗಳ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಮೊದಲು ಗುರುತಿನ ಪುರಾವೆಗಾಗಿ ಆಧಾರ್ ಕಾರ್ಡ್, ಆರ್ಥಿಕ ಸ್ಥಿತಿಯ ದೃಢೀಕರಣಕ್ಕಾಗಿ ರೇಷನ್ ಕಾರ್ಡ್ , ಹಾಗೂ ಮೀಸಲಾತಿ ಮತ್ತು ಆದಾಯದ ಮಿತಿ ತಿಳಿಯಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಿದ್ಧಪಡಿಸಿಕೊಳ್ಳಬೇಕು.

ಯೋಜನೆಯ ಸಹಾಯಧನವು ನೇರವಾಗಿ ನಿಮ್ಮ ಖಾತೆಗೆ ಬರಲು ಬ್ಯಾಂಕ್ ಪಾಸ್‌ಬುಕ್ ಪ್ರತಿ ಮತ್ತು ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು ಅತ್ಯಗತ್ಯವಾಗಿರುತ್ತವೆ.

ಪ್ರತಿಯೊಂದು ಗ್ರಾಮ ಪಂಚಾಯತ್‌ನಲ್ಲಿರುವ ಬಾಪೂಜಿ ಸೇವಾ ಕೇಂದ್ರದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

]]>
Tue, 30 Dec 2025 09:52:18 +0530 shivuagrico
Koli sakanike&ಉಚಿತ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ https://krushirushi.in/Koli-sakanike-2358 https://krushirushi.in/Koli-sakanike-2358 Koli sakanike-ಉಚಿತ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ


ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ.


ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕೋಳಿ ಮರಿಗಳನ್ನು ವಿತರಿಸಲಾಗುವುದು. ಜೇನು, ಕುರಿ, ಹಸು ಸಾಕಾಣಿಕೆಗೆ ಪ್ರೋತ್ಸಾಹ ನೀಡುತ್ತಿರುವ ಮಾದರಿಯಲ್ಲಿ ನಾಟಿ ಕೋಳಿ ಸಾಕಾಣಿಕೆ ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬಡ ಕುಟುಂಬಗಳ ಮಹಿಳೆಯರಿಗೆ ತಲಾ 20 ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುವುದು. ಪ್ರತಿ ತಾಲೂಕಿಗೆ 106 ಫಲಾನುಭವಿಗಳಂತೆ ಗುರಿ ನಿಗದಿಪಡಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿನ ರೈತ ಮಹಿಳೆಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘದ ಮಹಿಳಾ ಸದಸ್ಯರಿಗೆ, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಯೋಜನೆಯಡಿ ಆದ್ಯತೆ ನೀಡಲಾಗುವುದು.

ನಾಟಿ ಕೋಳಿಗಳಿಗೆ ಪ್ರಸ್ತುತ ಬೇಡಿಕೆ ಹೆಚ್ಚಾಗಿದೆ. ಇವುಗಳ ಸಾಕಾಣೆಗೆ ಹೆಚ್ಚು ಖರ್ಚಾಗುವುದಿಲ್ಲ. ಮನೆ ಮುಂದೆ ಹಿತ್ತಲುಗಳಲ್ಲಿ ಕೋಳಿ ಸಾಕಬಹುದು, ವೆಚ್ಚಕ್ಕಿಂತ ಅಧಿಕ ಲಾಭ ಸಿಗುತ್ತದೆ. ಇವುಗಳ ಸಾಕಾಣಿಕೆಗೆ ಹೆಚ್ಚಿನ ಶ್ರಮ ಅಗತ್ಯವಿರುವುದಿಲ್ಲ. ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಆರ್ಥಿಕ ಸಬಲತೆ ಸಾಧಿಸಲು ತಲಾ 20 ಕೋಳಿ ಮರಿ ವಿತರಿಸಲಾಗುವುದು ಎಂದು ಹೇಳಲಾಗಿದೆ.

1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming 

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ(Vetarnary department)ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.



ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್‌ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.

ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Vetarnary department schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?

ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ


ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.

ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy - https://krushirushi.in/Cattle-shed-subsidy-scheme-1630 

ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.


ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು

ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.


ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.


ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.

ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.


ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.

ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.


ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahvs.karnataka.gov.in/info-2/Schemes+&+Benefits/kn

]]>
Mon, 29 Dec 2025 18:37:46 +0530 shivuagrico
Vetarnary department subsidy schemes 2026&ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ? https://krushirushi.in/Vetarnary-department-subsidy-schemes-2026 https://krushirushi.in/Vetarnary-department-subsidy-schemes-2026 Vetarnary department subsidy schemes 2026-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?

ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ


ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.

ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy - https://krushirushi.in/Cattle-shed-subsidy-scheme-1630 

ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.


ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು

ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.


ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.


ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.

ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.


ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.

ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.


ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahvs.karnataka.gov.in/info-2/Schemes+&+Benefits/kn

]]>
Mon, 29 Dec 2025 10:24:40 +0530 shivuagrico
Bele vime& ಈ ಜಿಲ್ಲೆಯ 2.49 ಲಕ್ಷ ರೈತರಿಗೆ 559 ಕೋಟಿ ಬೆಳೆವಿಮೆ ಪರಿಹಾರ, ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ  https://krushirushi.in/Bele-vime-2356 https://krushirushi.in/Bele-vime-2356 Bele vime- ಈ ಜಿಲ್ಲೆಯ 2.49 ಲಕ್ಷ ರೈತರಿಗೆ 559 ಕೋಟಿ ಬೆಳೆವಿಮೆ ಪರಿಹಾರ, ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ 


ರಾಜ್ಯದಲ್ಲಿ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಇತಿಹಾಸದಲ್ಲೇ ನೀಡದಂತಹ ಪರಿಹಾರವನ್ನು ರೈತರಿಗೆ ನೀಡಲಾಗಿದೆ. ಸುಮಾರು ೪೩ ಲಕ್ಷ ರೈತರಿಗೆ ವಿಮಾ ಮೂಲಕ ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಸಭೆಯಲ್ಲಿಂದು ಹೇಳಿದರು.


ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಅಲ್ಲಮಪ್ರಭು ಪಾಟೀಲ್ ರವರ ಪ್ರಶ್ನೆಗೆ ಉತ್ತರಿಸಿದ ಅವರು, ರೈತ ಸುರಕ್ಷತಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ೨೮ ಲಕ್ಷ ರೈತರನ್ನು ನೋಂದಾವಣೆ ಮಾಡಲಾಗಿದೆ. ರಾಜ್ಯದಲ್ಲಿ ಬೆಳೆ ನಷ್ಟವಾದ ೪೩ ಲಕ್ಷ ರೈತರಿಗೆ ಸುಮಾರು ೫ ಸಾವಿರ ಕೋಟಿಗೂ ಹೆಚ್ಚು ಪರಿಹಾರ ನೀಡಲಾಗಿದೆ. ಇತಿಹಾಸದಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಟ್ಟಿರಲಿಲ್ಲ ಎಂದರು.


ಅತಿವೃಷ್ಠಿ ಪರಿಹಾರ ಬೇರೆ, ಬೆಳೆ ಹಾನಿ ಪರಿಹಾರ ಬೇರೆ ಎಂದು ಹೇಳಿದ ಅವರು, ಫಸಲ್ ಭೀಮಾ ಯೋಜನೆಯಡಿ ರೈತರು ವಿಮಾ ಹಣದ ಶೇ. ೨ ರಷ್ಟನ್ನು ಮಾತ್ರ ಕಟ್ಟಬೇಕು. ಉಳಿದ ಶೇ. ೯೮ ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸುತ್ತದೆ ಎಂದು ಹೇಳಿದರು.


ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕಲ್ಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ೨೦೨೨-೨೩ನೇ ಸಾಲಿನಿಂದ ೨೦೨೫-೨೬ನೇ ಸಾಲಿನ ಮುಂಗಾರು ಹಂಗಾಮಿನವರೆಗೂ ಒಟ್ಟು ೨೩,೭೮೨ ರೈತರು ೩೧,೩೩೮.೧೩ ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆ ವಿಮೆಯಡಿ ನೋಂದಾಯಿಸಿಕೊಂಡಿದ್ದಾರೆ ಎಂದರು.


ಇದುವರೆಗೂ ಈ ಕ್ಷೇತ್ರ ವ್ಯಾಪ್ತಿಯಲ್ಲಿ ೧೩,೭೨೮ ರೈತರಿಗೆ ಬೆಳೆ ವಿಮೆ ಪರಿಹಾರ ನೀಡಲಾಗಿದೆ. ೯೪೫ ಪ್ರಕರಣಗಳು ಬಾಕಿಯಿದ್ದು, ಅವುಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡಲಾಗುವುದು. ವಿಮೆಯಡಿ ರೈತರಿಗೆ ಯಾವುದೇ ಬಾಕಿ ಇಲ್ಲದಂತೆ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುತ್ತದೆ ಎಂದು ಅವರು ಹೇಳಿದರು.

Parliament session 

ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಗೆ ಸಂಬಂಧಿಸಿದಂತೆ 2024-25ನೇ ಸಾಲಿಗೆ ಬೆಳೆ ವಿಮೆ ದಾವೆಗಳ ಕುರಿತು ರೈತರಿಂದ ಯಾವುದೇ ದೂರುಗಳನ್ನು ಸರ್ಕಾರ ಸ್ವೀಕರಿಸಿದೆಯೇ? ಬೆಳೆ ಹಾನಿಯನ್ನು ನಿಖರವಾಗಿ ಅಂದಾಜು ಮಾಡಲು ಸರ್ಕಾರ ಯಾವ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದೆ? ಕಳೆದ ಐದು ವರ್ಷಗಳಲ್ಲಿ ಕರ್ನಾಟಕದ ರೈತರಿಗೆ ಜಿಲ್ಲಾವಾರು ನೀಡಲಾದ ಬೆಳೆ ವಿಮೆಯ ವಿವರಗಳೇನು? ರೈತರಿಗೆ ಬೆಳೆ ವಿಮಾ ದಾವೆಗಳನ್ನು ಸಮಯಕ್ಕೆ ಸರಿಯಾಗಿ ಹಾಗೂ ಶೀಘ್ರವಾಗಿ ಪಾವತಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ವಿವರಗಳೇನು? ಎಂದು ಸಂಸದ ಗೊವಿಂದ ಕಾರಜೋಳ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಕೃಷಿ ಸಚಿವರಿಗೆ ಪ್ರಶ್ನೆ ಕೇಳಿದರು.

ಸಂಸದರ ಪ್ರಶ್ನೆಗೆ ಉತ್ತರ ನೀಡಿದ ರಾಮನಾಥ್ ಠಾಕೂರ್, ಚಿತ್ರದುರ್ಗ ಜಿಲ್ಲೆಯಲ್ಲಿ 2,48,212 ಲಕ್ಷ ರೈತರಿಗೆ 559.91 ಕೋಟಿ ರೂ. ವಿಮಾ ಹಣ ದೊರಕಿದೆ. ಅದೇ ರೀತಿ ರಾಜ್ಯದಲ್ಲಿ 1,29,95,086 ಕೋಟಿ ರೈತರು ವಿಮೆಗೆ ನೊಂದಣಿ ಮಾಡಿಸಿಕೊಂಡಿದ್ದು, 1,584 ಕೋಟಿ ವಿಮೆ ಪ್ರೀಮಿಯಮ್ ಪಾವತಿಸಿರುತ್ತಾರೆ. ರಾಜ್ಯದ ರೈತರಿಗೆ 10,000 ಕೋಟಿಯಷ್ಟು ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ವಿಮೆ ಪರಿಹಾರ ಸಿಕ್ಕಿದೆ ಎಂದು ತಿಳಿಸಿದ್ದಾರೆ.

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Mon, 29 Dec 2025 07:57:36 +0530 shivuagrico
Gruhalakshmi 24th instalment&ಕೊನೆಗೂ ಜಮಾ ಆಯ್ತು 24ನೇ ಕಂತಿನ ಗೃಹಲಕ್ಷ್ಮಿ ಹಣ, ನಿಮಗೂ ಜಮಾ ಆಯ್ತಾ ಚೆಕ್ ಮಾಡಿ https://krushirushi.in/Gruhalakshmi-24th-instalment-2355 https://krushirushi.in/Gruhalakshmi-24th-instalment-2355 Gruhalakshmi 24th instalment-ಕೊನೆಗೂ ಜಮಾ ಆಯ್ತು 24ನೇ ಕಂತಿನ ಗೃಹಲಕ್ಷ್ಮಿ ಹಣ, ನಿಮಗೂ ಜಮಾ ಆಯ್ತಾ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Sun, 28 Dec 2025 13:19:15 +0530 shivuagrico
2026 ನೇ ಸಾಲಿನ ಪಿಎಂ ಕಿಸಾನ್ ಕಂತುಗಳ ದಿನಾಂಕ ಪ್ರಕಟ&Pmkisan Kisan instalment dates&2026 https://krushirushi.in/Pmkisan-instalment-dates-2026 https://krushirushi.in/Pmkisan-instalment-dates-2026 2026 ನೇ ಸಾಲಿನ ಪಿಎಂ ಕಿಸಾನ್ ಕಂತುಗಳ ದಿನಾಂಕ ಪ್ರಕಟ-Pmkisan Kisan instalment dates-2026

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬ‌ರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 22ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 22nd instalment date

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Sun, 28 Dec 2025 08:52:01 +0530 shivuagrico
Male nakshatragalu&2026ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು https://krushirushi.in/Male-nakshtragalu-2026 https://krushirushi.in/Male-nakshtragalu-2026 Male nakshatragalu-2026ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು


2026 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-14-4-2026

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-28-4-2026

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2026

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-25-5-2026

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-6-7-2026

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-20-7-2026

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-31-8-2026

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2026

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-27-9-2026

ಉತ್ತಮ ಮಳೆ

14.ಚಿತ್ತ

ದಿನಾಂಕ-11-10-2026

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-24-10-2026

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2026

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs  ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in  website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.     

https://krushirushi.in/contact-us


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ

]]>
Sun, 28 Dec 2025 07:12:25 +0530 shivuagrico
Bele parihara list&ನಿಮ್ಮೂರಿನಲ್ಲಿ ಇಲ್ಲಿಯವರೆಗೂ ಯಾರಿಗೆ ಎಷ್ಟು ಬೆಳೆಪರಿಹಾರ ಜಮಾ ಆಗಿದೆ ಚೆಕ್ ಮಾಡಿ https://krushirushi.in/Bele-parihara-list-2352 https://krushirushi.in/Bele-parihara-list-2352 Bele parihara list-ನಿಮ್ಮೂರಿನಲ್ಲಿ ಇಲ್ಲಿಯವರೆಗೂ ಯಾರಿಗೆ ಎಷ್ಟು ಬೆಳೆಪರಿಹಾರ ಜಮಾ ಆಗಿದೆ ಚೆಕ್ ಮಾಡಿ

ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ಸದನಕ್ಕೆ ಈ ಮಾಹಿತಿ ನೀಡಿದರು.

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Sat, 27 Dec 2025 15:29:48 +0530 shivuagrico
Arecanut&ಸಾವಿನ ಅಂಚಿಗೆ ಜಾರಿದ ಸಾವಿರಾರು ಅಡಕೆ ಮರಗಳು; ಬೆಳೆಗಾರರ ಸ್ಥಿತಿ ಸಂಕಷ್ಟದಲ್ಲಿ https://krushirushi.in/Arecanut-plantations-suffer-massive-damage https://krushirushi.in/Arecanut-plantations-suffer-massive-damage ತೀರ್ಥಹಳ್ಳಿಯ ಪ್ರಸಿದ್ಧ ದೇಶಾವರಿ ಅಡಕೆಗೆ ಎಲೆಚುಕ್ಕಿ ರೋಗ ಆವರಿಸಿದ್ದು, ಇಳುವರಿ ಕುಸಿತದಿಂದ ರೈತರ ಆರ್ಥಿಕತೆ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಹಲವು ವರ್ಷಗಳಿಂದ ಕಾಡುತ್ತಿರುವ ಈ ರೋಗಕ್ಕೆ ಪರಿಹಾರ ಸಿಗದೆ, ಮರಗಳು ನಾಶವಾಗುತ್ತಿವೆ. ಸರ್ಕಾರದಿಂದ ಸೂಕ್ತ ಸ್ಪಂದನೆ ಹಾಗೂ ಸಂಶೋಧನೆಗೆ ಪ್ರೋತ್ಸಾಹದ ಕೊರತೆ ಎದ್ದು ಕಾಣುತ್ತಿದೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗುವ ಭೀತಿ ಎದುರಾಗಿದೆ.

ಅತ್ಯುತ್ತಮ ಗುಣಮಟ್ಟದ ದೇಶಾವರಿ ಅಡಕೆ ಉತ್ಪಾದನೆಗೆ ತೀರ್ಥಹಳ್ಳಿ ಪ್ರಸಿದ್ಧಿಯಾಗಿದೆ. ಮಾರುಕಟ್ಟೆಯಲ್ಲಿ ಇಂದಿಗೂ ದೇಶಾವರಿ ಅಡಕೆಗೆ ನಿರೀಕ್ಷೆಗೂ ಮೀರಿದ ಬೆಲೆ ದೊರೆಯುತ್ತಿದೆ. ಉತ್ತಮ ಧಾರಣೆ ಕಾರಣ ಮಲೆನಾಡಿನ ಆರ್ಥಿಕ ಚಟುವಟಿಕೆಯಲ್ಲಿ ಅಡಕೆ ಪ್ರಧಾನ ಪಾತ್ರ ವಹಿಸಿದೆ. ಆದರೆ, ಈ ವರ್ಷ ಅಡಕೆಗೆ ಬಾಧಿಸಿರುವ ಎಲೆಚುಕ್ಕಿ ರೋಗ ಮಲೆನಾಡು ಭಾಗದ ಆರ್ಥಿಕ ಚಟುವಟಿಕೆಗೆ ಭಾರೀ ಹೊಡೆತ ನೀಡುವುದು ಬಹುತೇಕ ಖಚಿತ ವಾಗಿದೆ...

ತಾಲೂಕಿನ ಬಹುತೇಕ ಭಾಗಕ್ಕೆ ಎಲೆಚುಕ್ಕಿ ರೋಗ ವ್ಯಾಪಿಸಿದ್ದು, ಆರ್ಥಿಕ ಚಟುವಟಿಕೆ ನಿಧಾನಕ್ಕೆ ಸೊರಗುತ್ತಿದೆ. ಎಲೆಚುಕ್ಕಿ ರೋಗ, ಇನ್ನೊಂದೆಡೆ ಅಡಕೆ ಇಳುವರಿ ಕುಸಿತ ಆರ್ಥಿಕ ಚಟುವಟಿಕೆ ಮೇಲೆ ದುಷ್ಪರಿಣಾಮ ಬೀರಿದೆ. ಸಾವಿರಾರು ಅಡಕೆ ಮರಗಳು ಸಾವಿನ ಅಂಚಿನಲ್ಲಿದ್ದು, ಮುಂದಿನ ವರ್ಷ ರೋಗ ಉಲ್ಬಣಿಸಿದರೆ ಎಕರೆಗಟ್ಟಲೆ ವಿಸ್ತೀರ್ಣದಲ್ಲಿ ಅಡಕೆ ಮರಗಳು ಜೀವ ಕಳೆದುಕೊಳ್ಳಲಿವೆ.

ಆರ್ಥಿಕ ಚಟುವಟಿಕೆಗೆ ಹೊಡೆತ

ಬಹುತೇಕ ಜನರ ಬದುಕು ಅಡಕೆ ಭವಿಷ್ಯವನ್ನೇ ಆಧರಿಸಿದೆ. ರೋಗ ಉಲ್ಬಣ, ಇಳುವರಿ ಕುಸಿತ, ಆರ್ಥಿಕ ಹೊಡೆತ ಎಲ್ಲದರ ಅನುಭವ ಜನರಿಗೆ ಗೊತ್ತಾಗುತ್ತಿದೆ. ರೋಗದ ಕಾರಣ ಅಡಕೆ ಭವಿಷ್ಯ ಆತಂಕದಲ್ಲಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತ ವಾಗುವ ಮುನ್ಸೂಚನೆ ದಟ್ಟವಾಗಿದೆ.

ಔಷಧ ಪತ್ತೆಗೆ ಸಿಗದ ಪ್ರೋತ್ಸಾಹ

ನೂರಾರು ವರ್ಷಗಳಿಂದ ದೇಶಾವರಿ ತಳಿಯ ಅಡಕೆ ಯಾವ ರೋಗಕ್ಕೂ ಜಗ್ಗಿಲ್ಲ. ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದ ಕೊಳೆರೋಗಕ್ಕೆ ರೈತರು 45 ದಿನಕ್ಕೊಮ್ಮೆ ಬೋರ್ಡೋ ಮಿಶ್ರಣ ಔಷಧ ಸಿಂಪಡಣೆ ಮಾಡಿ ರೈತರು ಸುಮ್ಮನಾಗುತ್ತಿದ್ದರು. ಇತ್ತೀಚಿನ ವರ್ಷಗಳಲ್ಲಿಕೊಳೆರೋಗ ನಿಯಂತ್ರಣಕ್ಕೆ ರೈತರು 30 ದಿನದೊಳಗೆ ಬೋರ್ಡೋ ಮಿಶ್ರಣ ಔಷಧ ಸಿಂಪಡಣೆ ಮಾಡುತ್ತಿದ್ದಾರೆ. ಹೀಗಿದ್ದರೂ ಕೊಳೆರೋಗ ಕೂಡ ಸಂಪೂರ್ಣ ನಿಯಂತ್ರಣವಾಗುತ್ತಿಲ್ಲ.

ಆರೇಳು ವರ್ಷದಿಂದ ವಿಪರೀತ ಎಂಬಂತೆ ಕಂಡುಬಂದ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ವಿಜ್ಞಾನಿಗಳು, ತೋಟಗಾರಿಕಾ ತಜ್ಞರು ಸಲಹೆಯಂತೆ ಉಪಯೋಗಿಸಿದ ಔಷಧಗಳು ನಿಷ್ಟ್ರಯೋಜಕ ವಾಗಿವೆ. ಆಗಸ್ಟ್‌ ತಿಂಗಳ ಅಂತ್ಯದಲ್ಲಿಎಲೆಚುಕ್ಕಿ ರೋಗ ವ್ಯಾಪಕವಾಗಿ ಮರ, ಬೆಳೆ ಮೇಲೆ ಭಾರೀ ಪ್ರಮಾಣದಲ್ಲಿ ದುಷ್ಪರಿಣಾಮ ಬೀರುತ್ತಿದೆ. ರೈತರು, ಅಡಕೆ ವಹಿವಾಟು ಅವಲಂಬಿಸಿದ ಜನರು ತೊಂದರೆಗೆ ಸಿಕ್ಕಿಕೊಳ್ಳುತ್ತಿದ್ದಾರೆ ಎಂಬ ಪೂರ್ಣ ಮಾಹಿತಿ ಇದ್ದರೂ ಇವತ್ತಿನವರೆಗೆ ಕೇಂದ್ರ, ರಾಜ್ಯ ಸರಕಾರ ಉನ್ನತ ಮಟ್ಟದ ಸಮಿತಿ ರಚಿಸಿ ಪರಿಶೀಲನೆ ಕ್ರಮಕ್ಕೆ ಮುಂದಾಗಿಲ್ಲ ನಿರಂತರ ಸಂಶೋಧನೆಗೂ ತಜ್ಞರನ್ನು ನೇಮಿಸಿಲ್ಲ. ರೋಗ ನಿಯಂತ್ರಣ ಔಷಧ ಪತ್ತೆಗೆ ಖಾಸಗಿ ವಲಯದ ಸಂಶೋಧಕರಿಗೂ ಸರಕಾರಗಳು ಪ್ರೋತ್ಸಾಹ ನೀಡಿಲ್ಲ.

]]>
Sat, 27 Dec 2025 12:49:20 +0530 shivuagrico
Free vegetable seed kit&ರೈತರಿಗೆ ಉಚಿತವಾಗಿ 2 ಸಾವಿರ ಮೊತ್ತದ ತರಕಾರಿ ಬೀಜ ವಿತರಣೆಗೆ ಅರ್ಜಿ ಆಹ್ವಾನ https://krushirushi.in/Free-vegetable-seed-kit-2350 https://krushirushi.in/Free-vegetable-seed-kit-2350 Free vegetable seed kit-ರೈತರಿಗೆ ಉಚಿತವಾಗಿ 2 ಸಾವಿರ ಮೊತ್ತದ ತರಕಾರಿ ಬೀಜ  ವಿತರಣೆಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ರೂ. 2000/- ಮೊತ್ತದ ತರಕಾರಿ ಬೀಜಗಳ ಕಿಟ್‌ನ್ನು ವಿತರಣೆ ಮಾಡಲಾಗುತ್ತಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಂದ ಅರ್ಜಿ ಆಹ್ವಾನಿಸಿದೆ.


ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಆಧಾರ್‌ಕಾರ್ಡ್ ಜೇರಾಕ್ಸ್, ಬ್ಯಾಂಕ್ ಪಾಸ್ ಬುಕ್ ಜೇರಾಕ್ಸ್, ಜಾತಿ ಪ್ರಮಾಣ ಪತ್ರ(ಪ.ಜಾ/ಪ.ಪಂ.ದವರಿಗೆ ಮಾತ್ರ) ಗಳನ್ನು ಸಲ್ಲಿಸಿ ಫೆ. 11 ರಿಂದ ತರಕಾರಿ ಬೀಜಗಳ ಕಿಟ್‌ನ್ನು ಪಡೆಯುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Horticulture-department-schemes

ತೋಟಗಾರಿಕೆ ಇಲಾಖೆಯಿಂದ(Horticulture department schemes) ಸಣ್ಣ ಟ್ರ್ಯಾಕ್ಟ‌ರ್(Mini  tractor)
• ಡ್ರಾಗನ್ ಪೂಟ್(Dragon fruit), ಈರುಳ್ಳಿ ಶೇಖರಣಾ ಘಟಕಕ್ಕೆ (Onion storage)ಸಹಾಯಧನ
• ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ(green house) ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ  ನೀರುಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.


ಎಲ್ಲಿ ಅರ್ಜಿ ಸಲ್ಲಿಸಬೇಕು

ಆಸಕ್ತ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ (Horticulture department)ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ಅರ್ಜಿದಾರರ ಅಧಾರ್ ಕಾರ್ಡ್‌ ಪ್ರತಿ.
• ಬ್ಯಾಂಕ್‌ ಪಾಸ್ ಬುಕ್ ಪ್ರತಿ.
• ಪೋಟೋ.
• ಪಹಣಿ/ಉತಾರ್/RTC.
ರೇಷನ್ ಕಾರ್ಡ ಪ್ರತಿ.
ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.


ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM);

ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(Pradna mantri krishi sinchayi yojane);

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ(drip irrigation) ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್‍ರವರೆಗೆ ಶೇಕಡಾ 90%) ಸಹಾಯಧನ.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ (NAREGA)ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ(PMKVY) ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ(NHM) ಸಮುದಾಯ ಕೃಷಿಹೊಂಡ(Farm pond), ಕೃಷಿಹೊಂಡ, ಪ್ಯಾಕ್‌ಹೌಸ್(Pack house), ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್‌ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) (Fiber doti)ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


 ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾ‌ರ್ ಕಾರ್ಡ್ (Aadhaar card) ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ

https://horticulturedir.karnataka.gov.in/info-2/Facilities+available+to+farmers/kn



ಹೆಚ್ಚಿನ ಮಾಹಿತಿಗಾಗಿ  ತೋಟಗಾರಿಕೆ ಇಲಾಖೆ ಕಚೇರಿಯನ್ನು
ಸಂಪರ್ಕಿಸುವುದು. 

]]>
Sat, 27 Dec 2025 09:20:43 +0530 shivuagrico
Koli sakanike&ಉಚಿತ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ https://krushirushi.in/Koli-sakanike-2349 https://krushirushi.in/Koli-sakanike-2349 Koli sakanike-ಉಚಿತ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ


ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ.


ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕೋಳಿ ಮರಿಗಳನ್ನು ವಿತರಿಸಲಾಗುವುದು. ಜೇನು, ಕುರಿ, ಹಸು ಸಾಕಾಣಿಕೆಗೆ ಪ್ರೋತ್ಸಾಹ ನೀಡುತ್ತಿರುವ ಮಾದರಿಯಲ್ಲಿ ನಾಟಿ ಕೋಳಿ ಸಾಕಾಣಿಕೆ ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬಡ ಕುಟುಂಬಗಳ ಮಹಿಳೆಯರಿಗೆ ತಲಾ 20 ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುವುದು. ಪ್ರತಿ ತಾಲೂಕಿಗೆ 106 ಫಲಾನುಭವಿಗಳಂತೆ ಗುರಿ ನಿಗದಿಪಡಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿನ ರೈತ ಮಹಿಳೆಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘದ ಮಹಿಳಾ ಸದಸ್ಯರಿಗೆ, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಯೋಜನೆಯಡಿ ಆದ್ಯತೆ ನೀಡಲಾಗುವುದು.

ನಾಟಿ ಕೋಳಿಗಳಿಗೆ ಪ್ರಸ್ತುತ ಬೇಡಿಕೆ ಹೆಚ್ಚಾಗಿದೆ. ಇವುಗಳ ಸಾಕಾಣೆಗೆ ಹೆಚ್ಚು ಖರ್ಚಾಗುವುದಿಲ್ಲ. ಮನೆ ಮುಂದೆ ಹಿತ್ತಲುಗಳಲ್ಲಿ ಕೋಳಿ ಸಾಕಬಹುದು, ವೆಚ್ಚಕ್ಕಿಂತ ಅಧಿಕ ಲಾಭ ಸಿಗುತ್ತದೆ. ಇವುಗಳ ಸಾಕಾಣಿಕೆಗೆ ಹೆಚ್ಚಿನ ಶ್ರಮ ಅಗತ್ಯವಿರುವುದಿಲ್ಲ. ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಆರ್ಥಿಕ ಸಬಲತೆ ಸಾಧಿಸಲು ತಲಾ 20 ಕೋಳಿ ಮರಿ ವಿತರಿಸಲಾಗುವುದು ಎಂದು ಹೇಳಲಾಗಿದೆ.

1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming 

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ(Vetarnary department)ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.



ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್‌ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.

ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Vetarnary department schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?

ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ


ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.

ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy - https://krushirushi.in/Cattle-shed-subsidy-scheme-1630 

ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.


ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು

ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.


ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.


ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.

ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.


ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.

ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.


ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahvs.karnataka.gov.in/info-2/Schemes+&+Benefits/kn

]]>
Fri, 26 Dec 2025 16:42:04 +0530 shivuagrico
FID&ಸರ್ಕಾರದ ಸಬ್ಸಿಡಿ ಸವಲತ್ತು,ಬೆಳೆಸಾಲ ಹಾಗೂ ಬೆಳೆವಿಮೆಗೆ ಎಫ್ ಐಡಿ ಕಡ್ಡಾಯ,ಆಧಾರ್ ನಂಬರ್ ಹಾಕಿ ನಿಮ್ಮ FID  ತಿಳಿದುಕೊಳ್ಳಿ https://krushirushi.in/FID-2348 https://krushirushi.in/FID-2348 FID-ಸರ್ಕಾರದ ಸಬ್ಸಿಡಿ ಸವಲತ್ತು,ಬೆಳೆಸಾಲ ಹಾಗೂ ಬೆಳೆವಿಮೆಗೆ ಎಫ್ ಐಡಿ ಕಡ್ಡಾಯ,ಆಧಾರ್ ನಂಬರ್ ಹಾಕಿ ನಿಮ್ಮ FID  ತಿಳಿದುಕೊಳ್ಳಿ

ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.

 ಏನಿದು ಫ್ರೂಟ್ಸ್ ನಂಬರ್


 ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.



ನಿಮ್ಮ FID ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx 

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.

FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

 ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್‍ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.

 ಏಕೆ ನೋಂದಾಯಿಸಬೇಕು?


 ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್  ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ


ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.

ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು

ದ ಸಬ್ಸಿಡಿ ಸವಲತ್ತು,ಬೆಳೆಸಾಲ ಹಾಗೂ ಬೆಳೆವಿಮೆಗೆ ಎಫ್ ಐಡಿ ಕಡ್ಡಾಯ,ಆಧಾರ್ ನಂಬರ್ ಹಾಕಿ ನಿಮ್ಮ FID  ತಿಳಿದುಕೊಳ್ಳಿ

ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.

 ಏನಿದು ಫ್ರೂಟ್ಸ್ ನಂಬರ್


 ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.



ನಿಮ್ಮ FID ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx 

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.

FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

 ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್‍ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.

 ಏಕೆ ನೋಂದಾಯಿಸಬೇಕು?


 ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್  ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ


ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.

ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು

]]>
Thu, 25 Dec 2025 10:05:09 +0530 shivuagrico
PM ಕುಸುಮ್&ಬಿ ಯೋಜನೆ : ಸೋಲಾರ್ ಪಂಪ್&ಸೆಟ್' ಗಾಗಿ ಅರ್ಜಿ ಸಲ್ಲಿಸಿರುವ ರೈತರೇ ಡಿ.30ರೊಳಗೆ ತಪ್ಪದೇ ಈ ಕೆಲಸ ಮಾಡಿಕೊಳ್ಳಿ https://krushirushi.in/PM-KUSUM-B:-Solar-pump-applicants-must-complete-the-required-process-by-Dec-30. https://krushirushi.in/PM-KUSUM-B:-Solar-pump-applicants-must-complete-the-required-process-by-Dec-30. ಪಿ.ಎಂ. ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್-ಸೆಟ್ಗಾಗಿ ಅರ್ಜಿ ಸಲ್ಲಿಸಿರುವ ರೈತರ ಗಮನಕ್ಕೆತಾಂತ್ರಿಕ ಕಾರ್ಯಸಾಧ್ಯತೆ ಹೊಂದಿರುವ ಅರ್ಜಿಗಳ ರೈತರುಗಳಿಗೆ ಈಗಾಗಲೇ ಮೊಬೈಲ್ ಸಂದೇಶಗಳನ್ನು ರವಾನಿಸಲಾಗಿದೆ/ರವಾನಿಸಲಾಗುತ್ತಿದೆ. ಈ ಸಂಬಂಧ ರೈತರು ತಮ್ಮ ಪಾಲಿನ ವಂತಿಗೆಯನ್ನು ದಿನಾಂಕ: 30.12.2025 ರೊಳಗೆ ಪಾವತಿಸಲು ಅಂತಿಮ ಗಡುವು ನಿಗಧಿಪಡಿಸಲಾಗಿದೆ.

ಸದರಿ ಗಡುವಿನ ಒಳಗಾಗಿ ಪಾವತಿಸಲು ವಿಫಲವಾದಲ್ಲಿ, ಅಂತಹ ಅರ್ಜಿಗಳನ್ನು ರದ್ದುಪಡಿಸಲಾಗುವುದು.

ಆನ್ಲೈನ್ ಮುಖಾಂತರ ವಂತಿಗೆಯನ್ನು ಪಾವತಿಸಲು www.souramitra.com ดู "PAY FARMER SHARE"ನ್ನು ಕ್ಲಿಕ್ ಮಾಡಿ ತಮ್ಮ ಅರ್ಜಿ ಸಂಖ್ಯೆ / ಮೊಬೈಲ್ ಸಂಖ್ಯೆ ನಮೂದಿಸಿ ಪಾವತಿಸಬಹುದಾಗಿರುತ್ತದೆ. ಹಣಪಾವತಿಗೆ ಸಂಬಂಧಿಸಿದಂತೆ ಮಾಹಿತಿಯನ್ನು KREDL ನ ಸಹಾಯವಾಣಿ : 080-22202100 & 8095132100 ಮುಖಾಂತರ ಪಡೆದುಕೊಳ್ಳಲು ಸೂಚಿಸಲಾಗಿದೆ.

]]>
Wed, 24 Dec 2025 12:10:57 +0530 shivuagrico
Cow Shed Subsidy: ಹಸು ಮತ್ತು ಎಮ್ಮೆ ಗಾಗಿ ಶೆಡ್ ನಿರ್ಮಿಸಲು 57,000 ಸಹಾಯಧನ! https://krushirushi.in/Cow-shed-subsidy-2346 https://krushirushi.in/Cow-shed-subsidy-2346 Cow Shed Subsidy:ಕರ್ನಾಟಕದಲ್ಲಿ ಹಸು, ಎಮ್ಮೆ, ಹಾಗೂ ಇತರ ಜಾನುವಾರುಗಳನ್ನು ಸಾಕುವುದು ಹಲವಾರು ಗ್ರಾಮೀಣ ಕುಟುಂಬಗಳ ಮುಖ್ಯ ಜೀವನೋಪಾಯವಾಗಿದೆ. ಆದರೆ, ಜಾನುವಾರುಗಳನ್ನು ಯೋಗ್ಯವಾಗಿ ಬೆಳೆಯಲು ಮತ್ತು ಅವರನ್ನು ಅತಿ ಉತ್ತಮ ಪರಿಸರದಲ್ಲಿ ಸಾಕಲು ಒಳ್ಳೆಯ ಶೆಡ್ (shed / ಕೊಟ್ಟಿಗೆ) ಅತ್ಯಂತ ಮುಖ್ಯ. ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಸಹಾಯದಿಂದ ಹಸು/ಎಮ್ಮೆ ಶೆಡ್ ನಿರ್ಮಾಣಕ್ಕೆ ಹಳ್ಳೈ ರೈತರಿಗೆ ಆರ್ಥಿಕ ನೆರವಾಗಲು ಸಬ್ಸಿಡಿ (ಸಹಾಯಧನ) ವ್ಯವಸ್ಥೆ ಜಾರಿಗೊಳ್ಳುತ್ತಿದೆ.

ಯೋಜನೆಯ ಉದ್ದೇಶ

ಈ ಯೋಜನೆಯ ಪ್ರಮುಖ ಉದ್ದೇಶಗಳು ಹೀಗಿವೆ:

  1. ಹಸು/ಎಮ್ಮೆ ಮತ್ತು ಇತರ ಜಾನುವಾರುಗಳಿಗೆ ಸುರಕ್ಷಿತ ಆಶ್ರಯ ಒದಗಿಸುವುದು: ಮಳೆ, ಕಿರಿದಿಯ ಹವಾಮಾನದಿಂದ ಜಾನುವಾರುಗಳು ರಕ್ಷಿತವಾಗಿರಲು ನೆಲವಾಗಿದೆ.
  2. ಹೈನುಗಾರಿಕೆಯ ಚಟುವಟಿಕೆಗೆ ಉತ್ತೇಜನ:ಹಸು/ಎಮ್ಮೆ ಪೋಷಣೆ ಮೂಲಕ ಹಾಲಿನ ಉತ್ಪಾದನೆ ಹೆಚ್ಚಿಸಿ ರೈತ ಆದಾಯವನ್ನು ಸುಧಾರಿಸು.
  3. ಗ್ರಾಮೀಣವರಿಗೆ ಆರ್ಥಿಕ ಸಹಾಯ: ದೊಡ್ಡ ವೆಚ್ಚದಲ್ಲಿ ಶೆಡ್ ಕಟ್ಟಲು ಸರ್ಕಾರದ ಭಾಗಶಃ ಸಹಾಯಧನದಿಂದ ಬಡ್ಡಿದಿನಚರಿ ಕಡಿಮೆ ಮಾಡಿ ರೈತರಿಗೆ ಕೈ ನೀಡುವುದು.

ಸಹಾಯಧನ ಮೊತ್ತ

ಈ ಯೋಜನೆಯಡಿಯಲ್ಲಿ ಶೆಡ್ ಕಟ್ಟುವವರಿಗೆ ಒಟ್ಟು ₹57,000ಗಳವರೆಗೆ ಸಹಾಯಧನ ನೀಡಲಾಗುತ್ತದೆ.
ಈ रकमದಲ್ಲಿ:

  • ಕೂಲಿ ವೆಚ್ಚ (Labor): ಸುಮಾರು ₹10,556
  • ಸಾಮಗ್ರಿ ವೆಚ್ಚ (Material): ಸುಮಾರು ₹46,444
    ಎಂದು ಹಂಚಲಾಗುತ್ತದೆ.

ಈ ಮೊತ್ತವು ಸಾಮಾನ್ಯ ರೈತರ ಹಾಗೂ SC/ST ಸೇರಿದಂತೆ ವಿವಿಧ ವರ್ಗದ ಫಲಾನುಭವಿಗಳಿಗೂ ಸಮಾನವಾಗಿ ₹57,000ರಷ್ಟು ದೊರೆಯುತ್ತದೆ.

ಯಾರಿಗೆ ಸಹಾಯಧನ ಸಿಗುತ್ತದೆ – ಅರ್ಹತೆ

ಈ ಯೋಜನೆಯ ಅಡಿ ಹನಿ ಹಿಡಿಯಲು ಕೆಲವು ಮುಖ್ಯ ಅರ್ಹತೆಗಳಿವೆ:

  1. ಕರ್ನಾಟಕದ ಗ್ರಾಮೀಣ ಪ್ರದೇಶದ ನಿವಾಸಿ: ರೈತನು ಕರ್ನಾಟಕದ ಗ್ರಾಮೀಣ ಪ್ರದೇಶದ ರೈತ ಅಥವಾ ಹಸಿ/ಎಮ್ಮೆ ಪೋಷಿಸುವ ವ್ಯಕ್ತಿಯಾಗಿರಬೇಕು.
  2. ನರೇಗಾ ಜಾಬ್ ಕಾರ್ಡ್:MGNREGA job card ಬೇಕಾಗಿದೆ.
  3. ಕನಿಷ್ಟ ಜಾನುವಾರು ಹೊಂದಿರಬೇಕು: 1 ಎಕರೆ ಕನಿಷ್ಠ 2-3 ಹಸು/ಎಮ್ಮೆ ಅಥವಾ ಇತರ ಜಾನುವಾರುಗಳನ್ನು ಪೋಷಿಸುತ್ತಿರುವುದು ಅಗತ್ಯ.
  4. ಶೆಡ್ ಕಟ್ಟಲು ಸ್ವಂತ ಜಾಗ: ಹೊಲ/ಗೃಹನಿವಾಸದ ಜಾಗ ಸ್ವಂತವಾಗಿ ಹೊಂದಿರುವುದು ಬೇಕಾಗುತ್ತದೆ.

ಅರ್ಜಿಗೆ ಬೇಕಾಗುವ ದಾಖಲೆಗಳು

ಹೆಚ್ಚು ತೊಂದರೆಗೆ ಇಲ್ಲದಂತೆ, ಬೇಕಾಗುವ ಕೆಲ ಮುಖ್ಯ ದಾಖಲೆಗಳು:

  • ಆಧಾರ್ ಕಾರ್ಡ್ (Aadhar Card)
  • MGNREGA job card
  • ಜಾನುವಾರು ಪಂಜಿ ಅಥವಾ ಮಾಲೀಕತ್ವ ಪ್ರಮಾಣ
  • ಶೆಡ್ ಕಟ್ಟುವ ಜಾಗದ ವಿವರ/ಸ್ಥಳ ದಾಖಲೆ
  • ಬ್ಯಾಂಕ್ ಖಾತೆ ವಿವರಗಳು

ಈ ದಾಖಲೆಗಳೊಂದಿಗೆ 신청ವನ್ನು ಗ್ರಾಮ ಪಂಚಾಯತ್ / ಸ್ಥಳೀಯ MGNREGA ಕಚೇರಿನಲ್ಲಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಪ್ರಕ್ರಿಯೆ

ಸರಳವಾಗಿ ಕೆಲವು ಹಂತಗಳಲ್ಲಿ ಮಾಡಬಹುದು:

  1. ಸ್ಥಳೀಯ ಗ್ರಾಮ ಪಂಚಾಯತ್ / ಗ್ರಾಮ ಅಭಿವೃದ್ಧಿ ಕಚೇರಿ ಭೇಟಿ:
    ಮನೆ ಹತ್ತಿರದ ಗ್ರಾಮ ಪಂಚಾಯತ್ ಕಚೇರಿಗೆ ಹೋಗಿ ಅರ್ಜಿ ನಮೂನೆ ಪಡೆದುಕೊಳ್ಳಿ.
  2. दಾಖಲೆಗಳನ್ನು ತಯಾರಿ:
    ಬೇಕಾದ ದಾಖಲೆಗಳನ್ನು ಒದಗಿಸಿ ಮತ್ತು ಎಲ್ಲಾ ವಿವರಗಳನ್ನು ಸರಿಯಾಗಿ ತುಂಬಿ.
  3. ವಿನಂತಿಯನ್ನು ಸಲ್ಲಿಸಿ:
    ನಮೂನೆಯೊಂದಿಗೆ ದಾಖಲೆಗಳನ್ನು ಕೂಡಿಸಿ ಗ್ರಾಮ ಪಂಚಾಯತ್‌ ಗೆ ಸಲ್ಲಿಸಿ.
  4. ಪರಿಶೀಲನೆ / ಅಂಬಿ ಪರಿಶೀಲನೆ:
    ಸ್ಥಳೀಯ ಅಧಿಕಾರಿ ಶೆಡ್ ಕಟ್ಟುವ ಜಾಗ ಮತ್ತು ವಿವರಗಳನ್ನು ಪರಿಶೀಲಿಸಿ ಅರ್ಜಿಯನ್ನು ದೃಢೀಕರಿಸುತ್ತಾರೆ.
  5. ಸಹಾಯಧನ ಹಸ್ತಾಂತರ:
    ಪರಿಶೀಲನೆ ನಂತರ, ಅನುಮೋದಿತ ಮೊತ್ತವನ್ನು ಫಲಾನುಭವಿಯ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

ಯೋಜನೆಯ ಪ್ರಯೋಜನಳು

ಈ ಯೋಜನೆಯಿಂದ ರೈತರಿಗೆ ಹಲವು ಲಭ್ಯವಾಗುತ್ತವೆ:

ಆರ್ಥಿಕ ಸಹಾಯಧನ

  • ದೊಡ್ಡ ವೆಚ್ಚ ಇರುವ ಶೆಡ್‌ ನಿರ್ಮಾಣಕ್ಕೆ ₹57,000 ಸಬ್ಸಿಡಿ ಒಂದೇ ಸಲ ಹಣವಾಗಿ ದೊರಕುತ್ತದೆ.

ಜಾನುವಾರುಗಳ ಸುಂದರ ಆಶ್ರಯ

  • ಹಸು/ಎಮ್ಮೆಗಳಿಗೆ ಸುರಕ್ಷಿತ, ಸ್ವಚ್ಛ ಪರಿಸರದಲ್ಲಿ ಶೆಡ್‌ ದೊರಕುತ್ತದೆ.

ಹಾಲಿನ ಉತ್ಪಾದನೆ ಮತ್ತು ಆದಾಯ

  • ಉತ್ತಮ ಶೆಡ್‌ ಸಹಾಯದಿಂದ ಹಾಲಿನ ಉತ್ಪಾದನೆ ಮತ್ತು ಹಾಲಿನ ಗುಣಮಟ್ಟ ಸುಧಾರಿಸುತ್ತದೆ, ಇದರಿಂದ ರೈತರ ಆದಾಯ ಹೆಚ್ಚಬಹುದು.

ಗ್ರಾಮೀಣ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ

  • ಜಾನುವಾರು ಸಾಕಡೆಯಿಂದ ಪೋಷಕರು ಹಾಗೂ ಕುಟುಂಬಗಳು ಆರ್ಥಿಕವಾಗಿ ಖತಾರದ ಬದುಕನ್ನು ನಡೆಸಬಹುದು.

ಯೋಜನೆಯ ಸವಾಲುಗಳು ಮತ್ತು ಸೂಚನೆಗಳು

ಹಾಗಾದರೂ ಕೆಲವೊಂದು ಸವಾಲುಗಳು ಇದ್ದರೂ ಜನನಿರೀಕ್ಷೆಗೆ ಅನುಗುಣವಾಗಿ ಯೋಜನೆ ಕಾರ್ಯನಿರ್ವಹಿಸಬೇಕು:

  • ಸಮಯೋಚಿತ ದಾಖಲೆ ಪರಿಶೀಲನೆ:
    ಕಡಿಮೆ ಸಮಯದಲ್ಲಿ ಪರಿಶೀಲನೆ ಮಾಡಿ ಸಹಾಯಧನ ನೀಡಬೇಕು.
  • ಗ್ರಾಮೀಣ ಸೌಲಭ್ಯಗಳ ಜಾಗೃತಿ:
    ಹೆಚ್ಚು ರೈತರಿಗೆ ಯೋಜನೆ ಕುರಿತು ಜಾಗೃತಿ ನೀಡಲು ಅಧಿಕಾರಿಗಳು ಪ್ರಯತ್ನ ಮಾಡಬೇಕು.
  • ಅರ್ಜಿ ಮುಖಾಂತರ ನೆರವು:
    ಗ್ರಾಮೀಣ ಹಳ್ಳಿಗಳಲ್ಲಿ ಆನ್‌ಲೈನ್‌ ಸೇವೆಗಳ ತೊಡಕು ಇರುವ ಕಾರಣ, ಗ್ರಾಮ ಪಂಚಾಯತ್‌ ಪರೀಕ್ಷಿತ ಅರ್ಜಿ ನೆರವಿನಿಂದ ಸಹ ಪ್ರಕಟಣೆ ಮಾಡಬೇಕು.

ಉಪಸಂಹಾರ

ಕರ್ನಾಟಕದಲ್ಲಿ ಹಸು/ಎಮ್ಮೆ ಶೆಡ್ ಸಹಾಯಧನ (Cow Shed Subsidy / Cattle Shed Subsidy) ಯೋಜನೆ ಗ್ರಾಮೀಣ ರೈತರಿಗೆ ಆರ್ಥಿಕ, ಸೌಲಭ್ಯಾತ್ಮಕವಾಗಿ ಮಾದರಿಯಾಗಿರುವ ಒಮ್ಮೆ ಅವಕಾಶ. ಇದು ಹಸು/ಎಮ್ಮೆ ಪೋಷಣೆಯಲ್ಲಿ ಉತ್ತಮ ದೃಷ್ಟಿಕೋನವನ್ನು ತರಲು ಸಹಾಯಮಾಡುತ್ತದೆ. ಸರಳ ಅರ್ಜಿ ಪ್ರಕ್ರಿಯೆ, ಸ್ಪಷ್ಟ ಅರ್ಹತೆ, ಮತ್ತು ಒಟ್ಟಿನಲ್ಲಿ ₹57,000ರ ಸಹಾಯಧನದಿಂದ ಹಳ್ಳೈ ರೈತರಿಗೆ ತಮ್ಮ ಜಾನುವಾರುಗಳಿಗೆ ಸುಂದರ ಮತ್ತು ಸುರಕ್ಷಿತ ಶೆಡ್‌ ಕಟ್ಟಲು ಇದು ಅತ್ಯುತ್ತಮ ಕಾರಣ.

]]>
Wed, 24 Dec 2025 06:34:49 +0530 shivuagrico
Bele samikshe status&ಬೆಳೆ ಸಮಿಕ್ಷೆ ಸರಿಯಾಗಿ ಆದ ಬೆಳೆಗಳಿಗೆ ಮಾತ್ರ ಬೆಳೆವಿಮೆ ಬೆಳೆಹಾನಿ ಹಣ,ನಿಮ್ಮ ಬೆಳೆ ಸಮಿಕ್ಷೆ ಸರಿಯಾಗಿ ಆಗಿದೆಯಾ ಚೆಕ್ ಮಾಡಿಕೊಳ್ಳಿ https://krushirushi.in/Bele-samikshe-status-2345 https://krushirushi.in/Bele-samikshe-status-2345 Bele samikshe status-ಬೆಳೆ ಸಮಿಕ್ಷೆ ಸರಿಯಾಗಿ ಆದ ಬೆಳೆಗಳಿಗೆ ಮಾತ್ರ ಬೆಳೆವಿಮೆ ಬೆಳೆಹಾನಿ ಹಣ,ನಿಮ್ಮ ಬೆಳೆ ಸಮಿಕ್ಷೆ ಸರಿಯಾಗಿ ಆಗಿದೆಯಾ ಚೆಕ್ ಮಾಡಿಕೊಳ್ಳಿ

ಬೆಳೆ ಸಮೀಕ್ಷೆ(Bele samikshe) ಮೂಲಕ ಸಂಗ್ರಹಿಸಲಾದ ಬೆಳೆ
ಮಾಹಿತಿ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ ದರ್ಶಕ ಮೊಬೈಲ್ ಆ್ಯಪ್(Bele darshaka App)ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ(Crop survey portal) ಮೂಲಕ ಆಕ್ಷೇಪಣೆ ಸಲ್ಲಿಸಬಹುದು. 

ಬೆಳೆ ಸಮೀಕ್ಷೆ ದತ್ತಾಂಶವನ್ನು ಬೆಳೆವಿಮೆ(Bele vime), ಬೆಂಬಲ ಬೆಲೆ ಯೋಜನೆಯಡಿ(MSP) ಬೆಳೆ ಮಾರಾಟ ಮಾಡಲು, ಬೆಳೆ ನಷ್ಟ ಪರಿಹಾರ(bele hani) ಹಾಗೂ ಇತರ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಳಕೆ ಮಾಡಲಾಗುವುದು. ಆದ್ದರಿಂದ ರೈತರು ತಾವು ಬೆಳೆದ ಬೆಳೆ ಹಾಗೂ ಬೆಳೆ ಸಮೀಕ್ಷೆಯಲ್ಲಿ (crop survey)ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಖಾತ್ರಿಪಡಿಸಿಕೊಳ್ಳಬೇಕು. ಒಂದು ವೇಳೆ ಭಿನ್ನವಾಗಿದ್ದಲ್ಲಿ, ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ನಂತರದ ಆಕ್ಷೇಪಣೆ ಸ್ವೀಕರಿಸಲಾಗುವುದಿಲ್ಲ.

ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಗೂಗಲ್ ಪ್ಲೇ ಸ್ಟೋರ್ ಮೂಲಕ ಅಥವಾ https://play.google.com/store/apps/details?id=com.crop.offcskharif_2021  ಲಿಂಕ್ ಮೇಲೆ ಕ್ಲಿಕ್ ಮಾಡಿ bele Darshaka application ಇನ್ಸ್ ಸ್ಟಾಲ್ ಮಾಡಿಕೊಳ್ಳಬಹುದು. 

ನಂತರ ರೈತ select ಮಾಡಿ

 ನಂತರ ವರ್ಷ,ಋುತು, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ.

ನಂತರ ಸರ್ವೇ ನಂಬರ್ ಹಾಕಿ,ಹಿಸ್ಸಾಆಯ್ಕೆ ಮಾಡಿ,ಸಮೀಕ್ಷೆಯ  ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ

ನಂತರ ಬೆಳೆವಿವರ ವೀಕ್ಷಿಸಿ ಮೇಲೆ ಕ್ಲಿಕ್ ಮಾಡಿ

ನಂತರ photo ಮೇಲೆ ಕ್ಲಿಕ್ ಮಾಡಿದರೆ ನೀವು ಬೆಳೆದ ಬೆಳೆ ಹಾಗೂ ಫೋಟೊ ಅಪ್ಲೊಡ್ ಸರಿಯಾಗಿರುವುದನ್ನು ಪರಿಕ್ಷೀಸಿ.

ಬೆಳೆ ಸಮಿಕ್ಷೆ ಸರಿಯಾಗಿರದಿದ್ದರೆ,ಮತ್ತೆ ಬೆಳೆ ಸಮಿಕ್ಷೆ ಮಾಡಿ ಸರಿಪಡಿಸಲು ಅವಕಾಶವಿರುತ್ತದೆ.

ಏನಿದು ಬೆಳೆ ದರ್ಶಕ ಆ್ಯಪ್?

ಈ ಅಪ್ಲಿಕೇಶನ್ ಮಾಡಿದ ಉದ್ದೇಶ ಬೆಳೆ ಸಮೀಕ್ಷೆಯನ್ನು (Crop survey)ನೋಡಲು.. ಇದರಲ್ಲಿ ನೀವು ಅಪ್‌ಲೋಡ್ ಮಾಡಿದ ಚಿತ್ರಗಳನ್ನು ಮತ್ತು ಸಮೀಕ್ಷೆ ಮಾಡಿದ ಸರ್ವೇಯರ್ ವಿವರಗಳನ್ನು ನೋಡಬಹುದು.

ತಮ್ಮ ಮೊಬೈಲ್ ಮೂಲಕ ಬೆಳೆಗಳ ಸಮೀಕ್ಷೆ(Bele samikshe) ಮಾಡಬಹುದು. ಅಥವಾ ನೆರೆಯ ಖಾಸಗಿ ವ್ಯಕ್ತಿಗಳ (Private resident) ಮೊಬೈಲ್ ಮೂಲಕ ಜಮೀನುಗಳ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ನಿಮ್ಮ ಜಮೀನಿನ ಸರ್ವೆ ನಂಬರ್(Survey number) ಮತ್ತು ಜಮೀನಿನ ಫೊಟೋ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಮೊಬೈಲ್ ನಲ್ಲಿ Bele darshak app ಮೂಲಕ ಕ್ಷಣಾರ್ಧದಲ್ಲಿ  ನೋಡಬಹುದು. ಒಂದು ವೇಳೆ ತಪ್ಪಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು. 

ಬೆಳೆ ದರ್ಶಕ್ ಆ್ಯಪ್(bele darshaka app) ಇನ್ಸ್ ಸ್ಟಾಲ್ ಮಾಡಿಕೊಂಡ ನಂತರ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಇನ್ನಿತರ ಮಾಹಿತಿ ನಮೂದಿಸಬೇಕು. ಬೆಳೆ ದರ್ಶಕ್ ಆ್ಯಪ್(Bele darshaka application) ಮೂಲಕ ಜಮೀನಿನಲ್ಲಿ ಬೆಳೆ ಸಮೀಕ್ಷೆ (Bele samikshe)ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ (Crop survey)ಸಮಯದಲ್ಲಿ ತೆಗೆಯಲಾದ ಜಿಪಿಎಸ್ ಆಧಾರಿತ (GPS Photo)ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ಅಲ್ಲದೆ ರೈತರ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ, (Mobile number)ರೈತರು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ನೋಡಬಹುದು.

 ಒಂದು ವೇಳೆ ಮಾಹಿತಿ ತಪ್ಪಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು.ಮೇಲ್ವಿಚಾರಕರು ಸೂಕ್ತ ಬೆಳೆಗಳನ್ನು ದಾಖಲಿಸಿ ರೈತರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುತ್ತಾರೆ. ಇನ್ನೇಕೆ ತಡ ಒಮ್ಮೆ ನಿಮ್ಮ ಬೆಳೆ ಸಮೀಕ್ಷೆಯಲ್ಲಿ ಎಲ್ಲಾ ಸರ್ವೆ ನಂಬರ್, ಮಾಹಿತಿ ಹಾಗೂ ಫೋಟೋ ಸರಿಯಾಗಿ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಡಿ

]]>
Tue, 23 Dec 2025 07:52:33 +0530 shivuagrico
Gruhalakshmi list&ಈ ವಾರದೊಳಗೆ ಪಟ್ಟಿಯಲ್ಲಿರುವ ಮಹಿಳೆಯರಿಗೆ 24ನೇ ಕಂತಿನ ಹಣ ಜಮಾ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ https://krushirushi.in/Gruhalakshmi-list-2344 https://krushirushi.in/Gruhalakshmi-list-2344 Gruhalakshmi list-ಈ ವಾರದೊಳಗೆ ಪಟ್ಟಿಯಲ್ಲಿರುವ ಮಹಿಳೆಯರಿಗೆ 24ನೇ ಕಂತಿನ ಹಣ ಜಮಾ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಗೃಹಲಕ್ಷ್ಮಿಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಶನಿವಾರದೊಳಗೆ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುವುದು' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಭಾನುವಾರ ಹೇಳಿದರು.


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Mon, 22 Dec 2025 08:59:16 +0530 shivuagrico
Bele parihara&ಈ ಜಿಲ್ಲೆಯ 1.86 ಲಕ್ಷ ರೈತರಿಗೆ 261.43 ಕೋಟಿ ಬೆಳೆಹಾನಿ ಪರಿಹಾರ,ನಿಮ್ಮ ಜಿಲ್ಲೆಯಲ್ಲಿ ನಿಮಗೇಷ್ಟು ಜಮಾ ಚೆಕ್ ಮಾಡಿ https://krushirushi.in/Bele-parihara-2343 https://krushirushi.in/Bele-parihara-2343 Bele parihara-ಈ ಜಿಲ್ಲೆಯ 1.86 ಲಕ್ಷ ರೈತರಿಗೆ 261.43 ಕೋಟಿ ಬೆಳೆಹಾನಿ ಪರಿಹಾರ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾದ1,86,426 ರೈತರ ಖಾತೆಗಳಿಗೆ 17 ಹಂತಗಳಲ್ಲಿ ಒಟ್ಟು ₹261.43 ಕೋಟಿ ಪರಿಹಾರ ಜಮೆ ಮಾಡಲಾಗಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರವಾಹದಿಂದ ಬೆಳೆ ಹಾನಿಯಾದ ರೈತರಿಗೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್‌ನಿಂದ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗಿದೆ ಎಂದು ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪ್ರತಿ ಹೆಕ್ಟೇರ್‌ಗೆ ಮಳೆಯಾಶ್ರಿತ ₹8,500, ನೀರಾವರಿ ಬೆಳೆಗೆ ₹17,000 ಮತ್ತು ಬಹುವಾರ್ಷಿಕ ಬೆಳೆಗಳಿಗೆ ₹22,500 ಗಳಂತೆ ಬೆಳೆ ಹಾನಿಯಾದ ರೈತರಿಗೆ, 10 ಹಂತಗಳಲ್ಲಿ ಒಟ್ಟು 1,76,382 ರೈತರಿಗೆ ₹127.16 ಕೋಟಿ ಪರಿಹಾರವನ್ನು ನೇರವಾಗಿ ಅವರ ಬ್ಯಾಂಕ್ ಖಾತೆ ಜಮೆ ಮಾಡಲಾಗಿದೆ ಎಂದು ವಿವರಿಸಿದರು.

Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ

ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ಸದನಕ್ಕೆ ಈ ಮಾಹಿತಿ ನೀಡಿದರು.

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Mon, 22 Dec 2025 07:17:59 +0530 shivuagrico
Belehani parihara patti&ಎಲ್ಲಾ ಗ್ರಾಮಪಂಚಾಯತಿಗಳಲ್ಲಿ ಬೆಳೆಹಾನಿ ಪರಿಹಾರ ಪಟ್ಟಿ ಪ್ರಕಟ,ನಿಮ್ಮ ಗ್ರಾಮಪಂಚಾಯತಿ ಪಟ್ಟಿಯಲ್ಲಿ ನಿಮ್ಮ ಜಮಾ ಹೀಗೆ ಚೆಕ್ ಮಾಡಿ https://krushirushi.in/Belehani-parihara-Patti-2342 https://krushirushi.in/Belehani-parihara-Patti-2342 Belehani parihara patti-ಎಲ್ಲಾ ಗ್ರಾಮಪಂಚಾಯತಿಗಳಲ್ಲಿ ಬೆಳೆಹಾನಿ ಪರಿಹಾರ ಪಟ್ಟಿ ಪ್ರಕಟ,ನಿಮ್ಮ ಗ್ರಾಮಪಂಚಾಯತಿ ಪಟ್ಟಿಯಲ್ಲಿ ನಿಮ್ಮ ಜಮಾ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/FarmerDeclarationReport.aspx

 

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ ವಿಕ್ಷಿಸು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ FID ಇರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಸಿಗಲಿದೆ

ಬೆಳೆಹಾನಿ ಪರಿಹಾರ ಜಮಾ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ನಿಮ್ಮ ಜಿಲ್ಲೆ, ತಾಲೂಕು, ಹೊಬಳಿ, ಗ್ರಾಮ, ವರ್ಷ, ಹಂಗಾಮು  ಹಾಗೂ ಬೆಳೆಹಾನಿ ಕಾರಣ select ಮಾಡಿ,Get report ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(bele hani parihara) ಜಮಾ ಮಾಹಿತಿ ದೊರೆಯಲಿದೆ


ನಂತರ view status ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಮಾಹಿತಿ ದೊರೆಯಲಿದೆ



ಈ ಲೇಖನದ ಕೊನೆಯಲ್ಲಿ ಪಟ್ಟಿಯನ್ನು ಲಗತ್ತಿಸಲಾಗಿದೆ ಇದೇ ರೀತಿ ಎಲ್ಲಾ ಗ್ರಾಮ ಪಂಚಾಯತಿ,ರೈತ ಸಂಪರ್ಕ ಕೇಂದ್ರಗಳಲ್ಲಿ FID ಮಾಡಿಸದ ಪಟ್ಟಿಯನ್ನು ಲಗತ್ತಿಸಲಾಗಿದ್ದು,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ FID ಮಾಡಿಸಿಕೊಳ್ಳಿ

]]>
Sun, 21 Dec 2025 04:34:37 +0530 shivuagrico
Milk incentive&ರೈತರಿಗೆ 1 ಲೀಟರ್ ಹಾಲಿಗೆ ಪ್ರೋತ್ಸಾಹಧನ 7 ರೂ ಗೆ ಏರಿಕೆ: ಸಿಎಂ ಸಿದ್ದರಾಮಯ್ಯ,ಇಲ್ಲಿಯವರೆಗೂ ಎಷ್ಟು ಪ್ರೋತ್ಸಾಹಧನ ಜಮಾ ಆಗಿದೆ ಚೆಕ್ ಮಾಡಿ https://krushirushi.in/milk-incentive-2341 https://krushirushi.in/milk-incentive-2341 Milk incentive-ರೈತರಿಗೆ 1 ಲೀಟರ್ ಹಾಲಿಗೆ ಪ್ರೋತ್ಸಾಹಧನ 7 ರೂ ಗೆ ಏರಿಕೆ: ಸಿಎಂ ಸಿದ್ದರಾಮಯ್ಯ,ಇಲ್ಲಿಯವರೆಗೂ ಎಷ್ಟು ಪ್ರೋತ್ಸಾಹಧನ ಜಮಾ ಆಗಿದೆ ಚೆಕ್ ಮಾಡಿ

ರೈತರಿಗೆ 1 ಲೀಟರ್ ಹಾಲಿಗೆ ಸಹಾಯಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು ರೈತರಿಗೆ ಹಸುಗಳನ್ನು ಸಾಕಿ ಮೇವು ನೀಡಲು ಹೆಚ್ಚು ಖರ್ಚುಗಳು ಆಗುತ್ತವೆ. ಮೇವು ಸಾಕಾಣಿಕೆಗೆ ರೈತರಿಗೆ ನೆರವಾಗಲು, ಮೇವಿನ ಹಿಂಡಿ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಪ್ರತಿಲೀಟರ್ ಹಾಲಿನ ಮೇಲೆ 5 ರೂಪಾಯಿ ಸಹಾಯಧನವನ್ನು ಹಿಂದೆ ನೀಡಲಾಗುತ್ತಿತ್ತು. ಅದನ್ನೀಗ ಈ ವರ್ಷದ ಅವಧಿಯಲ್ಲೇ 7 ರೂಪಾಯಿಗೆ ಹೆಚ್ಚಿಸುತ್ತಿದ್ದೇವೆ ಎಂದರು.

ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಹಿತದೃಷ್ಟಿಯಿಂದ ಮಹತ್ವದ ಘೋಷಣೆ ಮಾಡಿದ್ದಾರೆ. ಸದ್ಯ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಿಸುವುದಾಗಿ ತಿಳಿಸಿದರು.


ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದು ಭರವಸೆ ನೀಡಿದರು.

ತಮ್ಮ ಸರ್ಕಾರದ ಹಿಂದಿನ ಅವಧಿಯ (2013-18) ಪ್ರಣಾಳಿಕೆ ಭರವಸೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದರ ಜೊತೆಗೆ ಬಜೆಟ್‌ನಲ್ಲಿ ಘೋಷಿಸದೆ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು. ಪ್ರಸ್ತುತ (2023ರ ನಂತರ) ಪ್ರಣಾಳಿಕೆಯಲ್ಲಿನ 593 ಭರವಸೆಗಳ ಪೈಕಿ 293 ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದ್ದು, ಉಳಿದ ಭರವಸೆಗಳನ್ನು ಮುಂದಿನ ಮೂರು ಬಜೆಟ್‌ಗಳಲ್ಲಿ ಈಡೇರಿಸಲಾಗುವುದು ಎಂದು ಹೇಳಿದರು.

Milk incentive status-ಇಲ್ಲಿಯವರೆಗೂ ಜಮಾ ಆಗಿರುವ ಹಾಲಿನ ಪ್ರೋತ್ಸಾಹಧನ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ "ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಪ್ರೋತ್ಸಾಹಧನ ಮಾಹಿತಿ ಸಿಗಲಿದೆ.

ಹೀಗೂ ಚೆಕ್ ಮಾಡಬಹುದು

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/Klda/MilkIncentive?ServiceId=5399&Type=TABLE&DepartmentId=3119

ನಂತರ ನಿಮ್ಮ ಜಿಲ್ಲೆ,ತಾಲೂಕು,Milk Union,ಗ್ರಾಮ, select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ನಿಮ್ಮ ಗ್ರಾಮದಲ್ಲಿ ಯಾರಿಗೆಲ್ಲಾ ಎಷ್ಟು ಹಾಲಿನ ಪ್ರೋತ್ಸಾಹಧನ(Milk incentive) ಬಂದಿದೆ ಎಂದು ತಿಳಿಯಲಿದೆ

]]>
Sat, 20 Dec 2025 13:55:41 +0530 shivuagrico
ಆಧಾರ್ ಲಿಂಕ್ ಆದ ರೈತರಿಗೆ ವಾರದೊಳಗೆ ಬೆಳೆಹಾನಿ ಪರಿಹಾರ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿ&Aadhaar not linked croploss farmers list https://krushirushi.in/Aadhaar-not-linked-croploss-farmers-list-2340 https://krushirushi.in/Aadhaar-not-linked-croploss-farmers-list-2340 ಆಧಾರ್ ಲಿಂಕ್ ಆದ ರೈತರಿಗೆ ವಾರದೊಳಗೆ ಬೆಳೆಹಾನಿ ಪರಿಹಾರ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿ-Aadhaar not linked croploss farmers list

ರಾಜ್ಯಾದ್ಯಂತ ಕೇವಲ ಶೇ.03 ರಷ್ಟು ರೈತರಿಗೆ ಪರಿಹಾರ ಹಣ ಪಾವತಿಯಾಗಿಲ್ಲ ಎಂಬುದು ನಿಜ. ಕೆಲವು ರೈತರ ಆಧಾರ್ ಹೆಸರು ಮತ್ತು ಕೃಷಿ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿನ ಹೆಸರು ತಾಳೆಯಾಗುತ್ತಿಲ್ಲ. ಮತ್ತೂ ಕೆಲವರದ್ದು ಆಧಾರ್ ಸಂಖ್ಯೆಗೆ ಬ್ಯಾಂಕ್ ಖಾತೆ ಲಿಂಕ್ ಮಾಡಿಲ್ಲ. ಹೀಗಾಗಿ 26,394 ರೈತರಿಗೆ ಪರಿಹಾರದ ಹಣ ಪಾವತಿ ಆಗಿಲ್ಲ.

ಇದಲ್ಲದೆ, ಸರ್ಕಾರದವರು ಎನ್ಪಿಸಿಐ ಸೀಡಿಂಗ್ ಮಾಡಿದ್ದಾರೆ. ಹೀಗಾಗಿ 8,000 ರೈತರಿಗೆ ಹಣ ಪಾವತಿಯಾಗಿಲ್ಲ. ಈ ಎಲ್ಲಾ ಕಾರಣದಿಂದ ಒಟ್ಟಾರೆ 14,21,000 ರೈತರ ಪೈಕಿ 44,208 ರೈತರದ್ದು ಬಾಕಿ ಇದೆ. ಸರ್ಕಾರ ಈಗಾಗಲೇ ಹಣ ಪಾವತಿ ಮಾಡಿಯಾಗಿದ್ದು, ರೈತರ ಈ ಸಣ್ಣಪುಟ್ಟ ಸಮಸ್ಯೆಗಳು ಬಗೆಹರಿದ ಕೂಡಲೇ ರೈತರ ಖಾತೆಗೆ ಹಣ ಜಮೆ ಆಗಲಿದೆ ಎಂದು ಸಚಿವರು ಹೇಳಿದರು.

ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/AadharNotSeededReport.aspx

ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ

]]>
Sat, 20 Dec 2025 07:53:51 +0530 shivuagrico
Gruhalakshmi list&ಕೊನೆಗೂ ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಯ್ತು 2 ತಿಂಗಳ ಗೃಹಲಕ್ಷ್ಮಿ ಹಣ https://krushirushi.in/Gruhalakshmi-list-2339 https://krushirushi.in/Gruhalakshmi-list-2339 Gruhalakshmi list-ಕೊನೆಗೂ ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಯ್ತು 2 ತಿಂಗಳ ಗೃಹಲಕ್ಷ್ಮಿ ಹಣ

ರಾಜ್ಯದ ಮಹಿಳೆ ಸ್ವಾಭಿಮಾನದಿಂದ ಜೀವನ ಮಾಡಬೇಕು, ಆರ್ಥಿಕವಾಗಿ ಸಬಲರಾಗಬೇಕು ಎನ್ನುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದು ಇದುವರೆಗೆ 23 ಕಂತು ಹಾಕಿದ್ದು, 26 ಸಾವಿರ ರೂ. ಒಬ್ಬೊಬ್ಬರಿಗೆ ಬಂದಿದೆ. ಈ ಮಾತಿಗೆ ನಾನು ಈಗಲೂ ಬದ್ಧಳಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದರು.


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Sat, 20 Dec 2025 07:40:15 +0530 shivuagrico
Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ https://krushirushi.in/Tahasildar-verification-approved-2338 https://krushirushi.in/Tahasildar-verification-approved-2338 Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ


ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ

ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ

ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ

Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.

]]>
Fri, 19 Dec 2025 17:56:33 +0530 shivuagrico
Bele parihara&ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ https://krushirushi.in/Bele-parihara-list-2337 https://krushirushi.in/Bele-parihara-list-2337 Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ

ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ಸದನಕ್ಕೆ ಈ ಮಾಹಿತಿ ನೀಡಿದರು.

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Fri, 19 Dec 2025 06:09:40 +0530 shivuagrico
ಕೃಷಿ ಇಲಾಖೆಯಿಂದ "ಪವರ್ ಸ್ಪ್ರೇಯರ್‌" ಖರೀದಿಗೆ ಸಿಗಲಿದೆ 90 ಸಹಾಯಧನ.! https://krushirushi.in/90-subsidy-for-purchasing-Power-Sprayers. https://krushirushi.in/90-subsidy-for-purchasing-Power-Sprayers. ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ದೊಡ್ಡ ಪ್ರಮಾಣದಲ್ಲಿ ಸಿಂಪರಣೆಯನ್ನು ಸುಲಭವಾಗಿ ಹಾಗೂ ಕಡಿಮೆ ಸಮಯದಲ್ಲಿ ನಡೆಸಲು ಸಹಕಾರಿಯಾಗುವ ಹೈ ಪ್ರೆಶರ್ ಪವರ್ ಸ್ಪ್ರೇಯರ್ ಅನ್ನು ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಸಹಾಯಧನದಲ್ಲಿ ಪಡೆಯಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ.

ಈ ಹೈ ಪ್ರೆಶರ್ ಪವರ್ ಸ್ಪ್ರೇಯರ್ ಬಳಸಿ ರಾಸಾಯನಿಕ ಸಿಂಪರಣೆಯ ಜೊತೆಗೆ ಕೊಟ್ಟಿಗೆ ಸ್ವಚ್ಛತೆ, ವಾಹನ ಮತ್ತು ಟ್ರಾಕ್ಟರ್ ತೊಳೆಯುವುದು ಸೇರಿದಂತೆ ವಿವಿಧ ಕೃಷಿ ಪೂರಕ ಚಟುವಟಿಕೆಗಳನ್ನು ನಡೆಸಬಹುದಾಗಿದೆ. ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ರೋಗ ಹಾಗೂ ಕೀಟ ನಿಯಂತ್ರಣಕ್ಕೆ ಇದು ಅತ್ಯಂತ ಉಪಯುಕ್ತ ಯಂತ್ರವಾಗಿದ್ದು, ವಿಶೇಷವಾಗಿ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಇದು ಹೆಚ್ಚಿನ ಸಹಕಾರ ನೀಡಲಿದೆ.

ಸಹಾಯಧನದ ವಿವರ:

ಕೃಷಿ ಯಾಂತ್ರೀಕರಣ ಯೋಜನೆಯಡಿ ಹೈ ಪ್ರೆಶರ್ ಪವರ್ ಸ್ಪ್ರೇಯರ್ ವಿತರಣೆ ಮಾಡಲಾಗುತ್ತಿದ್ದು, ಸಾಮಾನ್ಯ ವರ್ಗದ (GEN) ರೈತರಿಗೆ ನಿಗದಿಪಡಿಸಿರುವ ದರ ಹಾಗೂ ಸಹಾಯಧನದ ವಿವರ ಈ ಕೆಳಗಿನಂತಿದೆ:

ಒಟ್ಟು ದರ: ರೂ.24,844

ಸಹಾಯಧನ: ರೂ.11,500

ರೈತರ ವಂತಿಕೆ: ರೂ.13,344

ಒಟ್ಟು ದರ: ರೂ.23,000

ಸಹಾಯಧನ: ರೂ.20,700

ರೈತರ ವಂತಿಕೆ: ರೂ.4,144

ಕಂಪನಿ ಹಾಗೂ ಮಾದರಿಯ ಆಧಾರದಲ್ಲಿ ಯಂತ್ರದ ದರ ಮತ್ತು ಸಹಾಯಧನದಲ್ಲಿ ವ್ಯತ್ಯಾಸ ಇರಬಹುದು. ಆಯಾ ಜಿಲ್ಲೆಯ ಕೃಷಿ ಇಲಾಖೆಯ ಅನುದಾನ ಲಭ್ಯತೆಯ ಆಧಾರದ ಮೇಲೆ ಸಹಾಯಧನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ:

ಸಹಾಯಧನದಲ್ಲಿ ಹೈ ಪ್ರೆಶರ್ ಪವರ್ ಸ್ಪ್ರೇಯರ್ ಪಡೆಯಲು ಆಸಕ್ತ ರೈತರು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅಲ್ಲದೆ, ಇಲಾಖೆಯಿಂದ ಸೂಚಿಸಲಾದ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸುವ ಅವಕಾಶವಿದೆ.

ಅರ್ಜಿಗೆ ಅಗತ್ಯ ದಾಖಲೆಗಳು:

ರೈತರ ಆಧಾರ್ ಕಾರ್ಡ್

ಬ್ಯಾಂಕ್ ಪಾಸ್‌ಬುಕ್

ಜಮೀನಿನ ಪಹಣಿ

ರೈತರ ಪೋಟೋ

ಬಾಂಡ್ ಪೇಪರ್

ರೇಷನ್ ಕಾರ್ಡ್

ಮೊಬೈಲ್ ಸಂಖ್ಯೆ

ಸಹಾಯಧನದ ಸೌಲಭ್ಯವನ್ನು ಬಳಸಿಕೊಂಡು ರೈತರು ಆಧುನಿಕ ಕೃಷಿ ಉಪಕರಣಗಳನ್ನು ಪಡೆದು ಉತ್ಪಾದಕತೆ ಹೆಚ್ಚಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ ಮಾಡಿದೆ.

]]>
Thu, 18 Dec 2025 13:47:54 +0530 shivuagrico
Namma Hola Namma Dari Scheme: ಜಮೀನಿಗೆ ರಸ್ತೆ ಸಂಪರ್ಕ ಈಗ ಸುಲಭ! https://krushirushi.in/Namma-Hola-Namma-Dari-Scheme https://krushirushi.in/Namma-Hola-Namma-Dari-Scheme

 ರೈತರಿಗೆ ಇದುವರೆಗೂ ಇದ್ದ ಬಹುದೊಡ್ಡ ತಲೆನೋವಿಗೆ ರಾಜ್ಯ ಸರ್ಕಾರವು ಒಂದು ಕ್ರಾಂತಿಕಾರಿ ಪರಿಹಾರ ನೀಡಲು ಮುಂದಾಗಿದೆ. ಹೊಲ, ಗದ್ದೆ, ತೋಟಗಳನ್ನು ಹೊಂದಿದ್ದರೂ, ಅಲ್ಲಿಗೆ ತಲುಪಲು ಸುಗಮ ರಸ್ತೆ ಇಲ್ಲದೆ ಗ್ರಾಮಸ್ಥರ ನಡುವೆ ಜಗಳ ಮತ್ತು ಮನಸ್ತಾಪಗಳು ಸಾಮಾನ್ಯವಾಗಿದ್ದವು.

ಈ ಸಮಸ್ಯೆಯನ್ನು ಮೂಲದಿಂದಲೇ ನಿವಾರಿಸುವ ಗುರಿಯೊಂದಿಗೆ ಸರ್ಕಾರವು ಮಹತ್ವಾಕಾಂಕ್ಷೆಯ "ನಮ್ಮ ಹೊಲ ನಮ್ಮ ದಾರಿ" ಯೋಜನೆಯನ್ನು ಜಾರಿಗೆ ತಂದಿದೆ. ಇದು ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಟ್ರ್ಯಾಕ್ಟರ್‌ಗಳನ್ನು ನೇರವಾಗಿ ಹೊಲಕ್ಕೆ ಒಯ್ಯಲು ಸಾಧ್ಯವಾಗುವಂತಹ ಸುಗಮ ಸಂಪರ್ಕವನ್ನು ಕಲ್ಪಿಸುವ ಯೋಜನೆಯಾಗಿದೆ.

ಕೃಷಿ ಕ್ರಾಂತಿಯ ಮೊದಲ ಹೆಜ್ಜೆ: ಹಳ್ಳಿಯ ಗದ್ದೆಗಳಿಗೆ ಡೈರೆಕ್ಟ್ ರೋಡ್!

ರ್ನಾಟಕ ಸರ್ಕಾರದ ಈ ಯೋಜನೆಯು ಗ್ರಾಮೀಣ ರೈತರ ಕೃಷಿ ಭೂಮಿಗಳಿಗೆ ನೇರ ರಸ್ತೆ ಸಂಪರ್ಕವನ್ನು ಒದಗಿಸುವುದನ್ನು ಪ್ರಮುಖ ಗುರಿಯಾಗಿ ಹೊಂದಿದೆ. ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರಕ್ಕೆ 30 ಕಿ.ಮೀ.ಗಳಂತೆ ಒಟ್ಟು 5670 ಕಿ.ಮೀ. ರಸ್ತೆಗಳನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ, ಪ್ರತಿ ಕಿ.ಮೀಗೆ 12.50 ಲಕ್ಷ ರೂಪಾಯಿಗಳ ವೆಚ್ಚದೊಂದಿಗೆ. ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ರಾಜ್ಯದ ಬಜೆಟ್ ಅನುದಾನಗಳನ್ನು ಸಂಯೋಜಿಸಿ, ಈ ಯೋಜನೆಯು ಸಾಗಣೆ ವೆಚ್ಚವನ್ನು ಕಡಿಮೆಗೊಳಿಸಿ ಸ್ಥಳೀಯ ಉದ್ಯೋಗ ಸೃಷ್ಟಿಗೆ ನೆರವಾಗುತ್ತದೆ.

ಯೋಜನೆಯ ಪ್ರಮುಖ ಅಂಶಗಳು:

ರೈತರ ಕೃಷಿ ಭೂಮಿಗಳಿಗೆ ನೇರ ಸಂಪರ್ಕ ಒದಗಿಸುವುದು, ಉತ್ಪನ್ನಗಳನ್ನು ಮಾರುಕಟ್ಟೆಗೆ ತ್ವರಿತವಾಗಿ ಸಾಗಿಸುವ ಸೌಲಭ್ಯವನ್ನು ಹೆಚ್ಚಿಸುವುದು ಮತ್ತು ಸಾರಿಗೆ ವೆಚ್ಚಗಳನ್ನು ತಗ್ಗಿಸುವುದು ಈ ಯೋಜನೆಯ ಪ್ರಮುಖ ಅಂಶಗಳು. ಇದಲ್ಲದೆ, ಸಾರ್ವಜನಿಕ ಮತ್ತು ರೈತರ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆಗಳನ್ನು ನಿರ್ಮಿಸುವುದು, ಗ್ರಾಮೀಣರಿಗೆ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವುದು ಮತ್ತು ನಗರಗಳ ಕಡೆಗೆ ವಲಸೆಯನ್ನು ಕಡಿಮೆಗೊಳಿಸುವುದು ಸೇರಿದಂತೆ, ಒಟ್ಟಾರೆ ಗ್ರಾಮೀಣ ಜೀವನಮಟ್ಟವನ್ನು ಉನ್ನತೀಕರಿಸುವುದು ಇದರ ಗುರಿಯಾಗಿದೆ.

ರೈತರಿಗೆ ದೊರೆಯುವ ಪ್ರಯೋಜನಗಳೇನು?

ಈ ಯೋಜನೆಯ ಮೂಲಕ ರೈತರು ಟ್ರ್ಯಾಕ್ಟರ್ ಮತ್ತು ಇತರ ದೊಡ್ಡ ವಾಹನಗಳನ್ನು ನೇರವಾಗಿ ಹೊಲಗಳಿಗೆ ತಲುಪಿಸಬಹುದು, ಇದರಿಂದಾಗಿ ಸಾಗಣೆ ವೆಚ್ಚಗಳು ಗಣನೀಯವಾಗಿ ಇಳಿಕೆಯಾಗುತ್ತವೆ. ಮಳೆಗಾಲದಲ್ಲಿ ಕೆಸರು ಸಮಸ್ಯೆಗಳು ಕಡಿಮೆಯಾಗಿ, ಬೆಳೆಗಳನ್ನು ತ್ವರಿತವಾಗಿ ಮಾರುಕಟ್ಟೆಗೆ ಕೊಂಡೊಯ್ಯಬಹುದು. ಸ್ಥಳೀಯ ಕಾರ್ಮಿಕರಿಗೆ ಉದ್ಯೋಗ ಲಭಿಸುವುದಲ್ಲದೆ, ರಸಗೊಬ್ಬರ ಮತ್ತು ಕೃಷಿ ಸಾಮಗ್ರಿಗಳನ್ನು ಸುಲಭವಾಗಿ ಹೊಲಗಳಿಗೆ ಸಾಗಿಸಬಹುದು, ಹಾಗೂ ರಾತ್ರಿಯ ಸಮಯದಲ್ಲೂ ಸುರಕ್ಷಿತ ಪ್ರಯಾಣ ಸಾಧ್ಯವಾಗುತ್ತದೆ. ಒಟ್ಟಾರೆಯಾಗಿ, ಗ್ರಾಮೀಣ ಸಂಪರ್ಕ ಮತ್ತು ಮೂಲಸೌಕರ್ಯಗಳು ಬಲಗೊಳ್ಳುತ್ತವೆ.

ರಸ್ತೆ ನಿರ್ಮಿಸಲು ಅರ್ಹತೆ ನಿಯಮಗಳೇನು?

ರಸ್ತೆಯನ್ನು ನಿರ್ಮಿಸಲು, ಕಂದಾಯ ಇಲಾಖೆಯ ನಕ್ಷೆಯಲ್ಲಿ ಅದನ್ನು ಸಾರ್ವಜನಿಕ ರಸ್ತೆ ಅಥವಾ ಕಾಲುದಾರಿ ಎಂದು ಗುರುತಿಸಿರಬೇಕು. ಒಬ್ಬರ ಮಾತ್ರ ಬಳಕೆಗೆ ಸೀಮಿತವಲ್ಲದೆ, ಅನೇಕ ರೈತರಿಗೆ ಉಪಯುಕ್ತವಾಗುವ ರಸ್ತೆಗಳನ್ನು ಆಯ್ಕೆಮಾಡಬೇಕು. ತಾಲೂಕು ಅಧಿಕಾರಿಗಳು ಶಾಸಕರೊಂದಿಗೆ ಸಮಾಲೋಚಿಸಿ, ಕಂದಾಯ ಮತ್ತು ಪಂಚಾಯತ್ ಅಧಿಕಾರಿಗಳ ಅಭಿಪ್ರಾಯಗಳನ್ನು ಪರಿಗಣಿಸಿ ಕಾಮಗಾರಿಗಳನ್ನು ನಿರ್ಧರಿಸುತ್ತಾರೆ. ಅಂತಿಮವಾಗಿ, ಗ್ರಾಮ ಸಭೆಯಲ್ಲಿ ಅನುಮೋದನೆ ಪಡೆದ ನಂತರ ವಿಶೇಷ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಬೇಕು, ಮತ್ತು ಜನರ ಸಹಭಾಗಿತ್ವವನ್ನು ಎಲ್ಲಾ ಹಂತಗಳಲ್ಲೂ ಖಾತರಿಪಡಿಸಬೇಕು.

ಖಾಸಗಿ ಭೂಮಿಗೆ ಸರ್ಕಾರದ ಮಾರ್ಗಸೂಚಿಗಳೇನು?

ರಸ್ತೆ ನಿರ್ಮಾಣಕ್ಕೆ ಖಾಸಗಿ ಭೂಮಿಯನ್ನು ಬಳಸುವ ಸಂದರ್ಭದಲ್ಲಿ, ಸರ್ಕಾರವು ಯಾವುದೇ ಪರಿಹಾರ ಹಣವನ್ನು ನೀಡುವುದಿಲ್ಲ. ಭೂಮಾಲೀಕರು ಸ್ವಯಂಪ್ರೇರಿತವಾಗಿ ಉಪನೋಂದಣಿ ಕಚೇರಿಯಲ್ಲಿ ದಾನ ಪತ್ರವನ್ನು ನೋಂದಾಯಿಸಿ, ಜಮೀನನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಬೇಕು. ರೈತರು ಒಪ್ಪದಿದ್ದರೆ, ಆ ರಸ್ತೆಯನ್ನು ಬಿಟ್ಟು ಬೇರೆ ಪರ್ಯಾಯವನ್ನು ಆಯ್ಕೆಮಾಡಬೇಕು ಎಂದು ಸರ್ಕಾರದ ಮಾರ್ಗಸೂಚಿಗಳು ಸೂಚಿಸುತ್ತವೆ.

ಒಂದು ಕಿ.ಮೀ. ರಸ್ತೆ ನಿರ್ಮಾಣಕ್ಕೆ ಎಷ್ಟು. ಅನುದಾನ?

'ನಮ್ಮ ಹೊಲ ನಮ್ಮ ದಾರಿ' ಯೋಜನೆಯಡಿ ಪ್ರತಿ ಕಿಲೋಮೀಟರ್ ರಸ್ತೆಗೆ 12.50 ಲಕ್ಷ ರೂಪಾಯಿಗಳನ್ನು ನಿಗದಿಪಡಿಸಲಾಗಿದ್ದು, ಇದನ್ನು ಎರಡು ಮೂಲಗಳಿಂದ ಹಂಚಿಕೆ ಮಾಡಲಾಗುತ್ತದೆ. 9 ಲಕ್ಷ ರೂಪಾಯಿಗಳನ್ನು ಎಂಜಿನರೇಗಾ ಯೋಜನೆಯಡಿ ಬಳಸಿ, 3.75 ಮೀಟರ್ ಅಗಲದ ರಸ್ತೆಯೊಂದಿಗೆ ಮೆಟಲಿಂಗ್ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತದೆ. ಉಳಿದ 3.50 ಲಕ್ಷ ರೂಪಾಯಿಗಳನ್ನು ರಾಜ್ಯದ ಬಜೆಟ್ ಶೀರ್ಷಿಕೆಯಡಿ ಮೀಸಲಿಟ್ಟು, ಯಂತ್ರಗಳ ಬಳಕೆಗೆ ಅನುಕೂಲ ಮಾಡಿಕೊಡಲಾಗುತ್ತದೆ.

ಅನುಷ್ಠಾನ ನಿಯಮಗಳೇನು?

ಕೂಲಿ ಮತ್ತು ಸಾಮಗ್ರಿಗಳ ನಡುವೆ 60:40 ಅನುಪಾತವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಕುಶಲ ಕೆಲಸಗಳನ್ನು ಉದ್ಯೋಗ ಚೀಟಿ ಹೊಂದಿದ ಕಾರ್ಮಿಕರಿಂದ ಮಾತ್ರ ನಿರ್ವಹಿಸಬೇಕು. ಎಂಜಿನರೇಗಾ ಅನುಮತಿತ ಯಂತ್ರಗಳನ್ನು ಮಾತ್ರ ಬಳಸಬಹುದು, ಆದರೆ ರಾಜ್ಯದ ಶೀರ್ಷಿಕೆಯಡಿ ಇತರ ಯಂತ್ರಗಳಿಗೆ ಅವಕಾಶವಿದೆ. ಕೇಂದ್ರದ ಮಾರ್ಗಸೂಚಿಗಳು ಮತ್ತು KTPP ನಿಯಮಗಳನ್ನು ಅನುಸರಿಸಬೇಕು. ಸೇತುವೆಗಳು ಮತ್ತು ಮೋರಿಗಳಂತಹ ಸೌಕರ್ಯಗಳನ್ನು ಸೇರಿಸಿ, ಇತರ ಯೋಜನೆಗಳ ಅನುದಾನಗಳೊಂದಿಗೆ ಸಂಯೋಜಿಸಬೇಕು. ಕಾಮಗಾರಿಯ ಎಲ್ಲಾ ಹಂತಗಳಲ್ಲಿ ಛಾಯಾಚಿತ್ರಗಳು ಮತ್ತು ಜಿಯೋ-ಟ್ಯಾಗ್ ಅನ್ನು ಸಾಫ್ಟ್‌ವೇರ್‌ನಲ್ಲಿ ನಮೂದಿಸಬೇಕು.

ನಿಮ್ಮೂರಿನ ದಾರಿ, ಜಮೀನು ದಾರಿ ಮಂಜೂರು ಮಾಡಿಸೋದು ಹೇಗೆ?

ಮೊದಲು, ನೀವು ಮತ್ತು ನಿಮ್ಮ ಸುತ್ತಲಿನ ರೈತರು ಒಟ್ಟಿಗೆ ಸೇರಿ ರಸ್ತೆಯ ಅಗತ್ಯತೆಯನ್ನು ವಿವರಿಸುವ ಲಿಖಿತ ಅರ್ಜಿಯನ್ನು ಗ್ರಾಮ ಪಂಚಾಯಿತಿಯ ಪಿಡಿಒಗೆ ಸಲ್ಲಿಸಿ. ಗ್ರಾಮ ಸಭೆಯಲ್ಲಿ ಹಾಜರಾಗಿ ಈ ವಿಷಯವನ್ನು ಚರ್ಚಿಸಿ ಅನುಮೋದನೆ ಪಡೆಯಿರಿ. ನಿಮ್ಮ ಕ್ಷೇತ್ರದ ಶಾಸಕರನ್ನು ಸಂಪರ್ಕಿಸಿ ಮನವಿ ಮಾಡಿ, ಮಂಜೂರಾತಿಗೆ ಒತ್ತಾಯಿಸಿ. ಕಾಮಗಾರಿ ಆರಂಭದ ನಂತರ, ಜಿಯೋ-ಟ್ಯಾಗ್ ಮತ್ತು ಛಾಯಾಚಿತ್ರಗಳ ಮೂಲಕ ಪಾರದರ್ಶಕವಾಗಿರುವಂತೆ ನೋಡಿಕೊಳ್ಳಿ.

]]>
Wed, 17 Dec 2025 12:47:52 +0530 shivuagrico
NPCI Status ನಲ್ಲಿ Active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/NPCI-status-active-2334 https://krushirushi.in/NPCI-status-active-2334 NPCI Status ನಲ್ಲಿ Active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ password create ಮಾಡಿ

Mobile number,Create ಮಾಡಿದ password ಹಾಗೂ captcha code ಹಾಕಿ ಲಾಗಿನ್ ಮಾಡಿ

ನಂತರ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, Search ಮೇಲೆ ಕ್ಲಿಕ್ ಮಾಡಿ

ನಂತರ NPCI check ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ NPCI active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆಹಾನಿ,ಬೆಳೆವಿಮೆ,ಪಿಎಂ ಕಿಸಾನ್ ಹಣ.

NPCI inactive ಎಂದು ಇದ್ದರೆ ನಿಮ್ಮ ಖಾತೆ ಇರುವ ಬ್ಯಾಂಕ್ ಗೆ ಹೋಗಿ ಕೂಡಲೇ NPCI Mapping ಮಾಡಿಸಿ

]]>
Wed, 17 Dec 2025 08:08:05 +0530 shivuagrico
ನರೇಗಾ ಸ್ವರೂಪ ಬದಲಾವಣೆ ಮಸೂದೆ: ವಿಕಸಿತ ಭಾರತದತ್ತ ‘ಜಿ ರಾಮ್‌ ಜಿ’ ಯೋಜನೆ https://krushirushi.in/MGNREGA-Replacement-Bill:-‘G-Ram-Ji’-Scheme https://krushirushi.in/MGNREGA-Replacement-Bill:-‘G-Ram-Ji’-Scheme ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರವು 2005ರಲ್ಲಿ ಜಾರಿಗೆ ತಂದಿದ್ದ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ'ಯ (ನರೇಗಾ) ಹೆಸರನ್ನೂ ಸೇರಿದಂತೆ ಕಾಯ್ದೆಯಲ್ಲಿನ ಹಲವು ಪ್ರಮುಖ ಅಂಶಗಳಿಗೆ ಬದಲಾವಣೆ ತರಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದೆ.

ಹೆಸರನ್ನು ಮಾತ್ರವಲ್ಲ ಕಾಯ್ದೆಯ ಮೂಲ ಸ್ವರೂಪವನ್ನೇ ಬದಲಾಯಿಸಲಾಗುತ್ತಿದೆ ಎನ್ನುವುದು ವಿರೋಧ ಪಕ್ಷಗಳ ಆರೋಪ. ನರೇಗಾ ಬದಲಿಗೆ 'ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್‌ (ಗ್ರಾಮೀಣ) (ವಿಬಿ-ಜಿ ರಾಮ್‌ ಜಿ) ಮಸೂದೆ, 2025'ಅನ್ನು ಮಂಡಿಸಲು ಕೇಂದ್ರ ಸರ್ಕಾರವು ಮುಂದಾಗಿದೆ.

ಮಸೂದೆ ಹೇಳುವುದೇನು?

 

ಅನುದಾನ: ರಾಜ್ಯಗಳಿಗೆ ಶೇ 40ರಷ್ಟು ಹೊರೆ

ನರೇಗಾ ಯೋಜನೆಗೆ ಬೇಕಾದ ಸಂಪೂರ್ಣ ಅನುದಾನವನ್ನು ಕೇಂದ್ರ ಸರ್ಕಾರವೇ ಭರಿಸುತ್ತಿತ್ತು. ಆದರೆ, ಈಗ ರಾಜ್ಯ ಸರ್ಕಾರಗಳೂ ಹಣ ಭರಿಸಬೇಕಾಗುತ್ತದೆ. ಕೇಂದ್ರ ಸರ್ಕಾರವು ಶೇ 60ರಷ್ಟು ಹಣವನ್ನು, ರಾಜ್ಯ ಸರ್ಕಾರವು ಶೇ 40ರಷ್ಟು ಹಣವನ್ನು ಭರಿಸಬೇಕಾಗುತ್ತದೆ (ಎಲ್ಲ ರಾಜ್ಯ ಸರ್ಕಾರಗಳು ಮತ್ತು ವಿಧಾನಸಭೆ ಇರುವ ಕೇಂದ್ರಾಡಳಿತ ಪ್ರದೇಶಗಳು). ಈಶಾನ್ಯ ರಾಜ್ಯಗಳು, ಹಿಮಾಲಯದ ತಪ್ಪಲಿನ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ (ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ) ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಅನುದಾನ ಹಂಚಿಕೆ ಅನುಪಾತವು ಶೇ 90:10ರಷ್ಟಿರುತ್ತದೆ. ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರವೇ ಪೂರ್ತಿ ಹಣ ಭರಿಸುತ್ತದೆ.

ನಿರುದ್ಯೋಗ ಭತ್ಯೆ:

ಹೊಸ ಕಾಯ್ದೆಯ ಅನ್ವಯ, ಉದ್ಯೋಗ ಖಾತರಿ ಪಡೆಯದ ವ್ಯಕ್ತಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಈ ಭತ್ಯೆಯನ್ನು ರಾಜ್ಯ ಸರ್ಕಾರವೇ ನೀಡಬೇಕು ಎನ್ನುತ್ತದೆ ಮಸೂದೆ.

ಗರಿಷ್ಠ ಮಿತಿ ನಿಗದಿ

ಕೇಂದ್ರ ಸರ್ಕಾರವು ಮೊದಲೇ ನಿಗದಿಪಡಿಸಿದ ನಿಯಮಾನುಸಾರ ಗರಿಷ್ಠ ಮಿತಿಗೆ ಒಳಪಟ್ಟು ರಾಜ್ಯ ಸರ್ಕಾರಗಳಿಗೆ ಹಣ ಮಂಜೂರು ಮಾಡುತ್ತದೆ. ಹಂಚಿಕೆ ಮಾಡಿದ ಅನುದಾನಕ್ಕಿಂತ ಹೆಚ್ಚುವರಿ ಕೆಲಸ ದಿನಗಳನ್ನು ಮಾಡಿಸಿದರೆ ರಾಜ್ಯ ಸರ್ಕಾರವೇ ಹೆಚ್ಚುವರಿ ಹಣವನ್ನು ಭರಿಸಬೇಕಾಗುತ್ತದೆ.

ಸಮಿತಿಗಳ ರಚನೆ:

ರಾಜ್ಯ ಸರ್ಕಾರಗಳಿಗೆ ಹಣ ಹಂಚಿಕೆ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರವು 'ರಾಷ್ಟ್ರೀಯ ಮಟ್ಟದ ಸಂಚಾಲನಾ ಸಮಿತಿ'ಯನ್ನು ರಚಿಸಬೇಕು. ಜೊತೆಗೆ, ಈ ಕಾಯ್ದೆಯ ಎಲ್ಲ ಕೆಲಸ ಕಾರ್ಯಗಳ ಮೇಲ್ವಿಚಾರಣೆಯನ್ನೂ ನೋಡಿಕೊಳ್ಳಬೇಕು. ಅಂತೆಯೇ, ಕಾಯ್ದೆಯ ಕುರಿತು ಮಾರ್ಗದರ್ಶನ ನೀಡಲು ರಾಜ್ಯ ಸರ್ಕಾರಗಳೂ 'ರಾಜ್ಯ ಮಟ್ಟದ ಸಂಚಾಲನಾ ಸಮಿತಿ'ಯನ್ನು ರಚಿಸಿಕೊಳ್ಳಬೇಕು ಎನ್ನುತ್ತದೆ ಮಸೂದೆ.

ಕೇಂದ್ರ, ರಾಜ್ಯಗಳಲ್ಲಿ ಮಂಡಳಿ ರಚನೆ

ಕಾಯ್ದೆ ಜಾರಿ ಸಂಬಂಧ ನಿಗಾ ಇರಿಸಲು ಕೇಂದ್ರ ಮಟ್ಟದಲ್ಲಿ 'ಕೇಂದ್ರೀಯ ಗ್ರಾಮೀಣ ಉದ್ಯೋಗ ಖಾತರಿ ಮಂಡಳಿ' ಮತ್ತು ರಾಜ್ಯ ಮಟ್ಟದಲ್ಲಿ 'ರಾಜ್ಯ ಗ್ರಾಮೀಣ ಉದ್ಯೋಗ ಖಾತರಿ ಮಂಡಳಿ'ಯನ್ನು ರಚಿಸಲಾಗುತ್ತದೆ.

ನಾಲ್ಕು ವಿಭಾಗಗಳಲ್ಲಿ ಕೆಲಸ

ಉದ್ಯೋಗ ಖಾತರಿ ಮೂಲಕ ಯಾವೆಲ್ಲ ಕೆಲಸಗಳನ್ನು ಕೈಗೊಳ್ಳಬಹುದು ಎನ್ನುವ ಬಗ್ಗೆ ಮಸೂದೆಯಲ್ಲಿ ಹೇಳಲಾಗಿದೆ. ಇದನ್ನು ಒಟ್ಟು ನಾಲ್ಕು ವಿಭಾಗಗಳಲ್ಲಿ ವಿಂಗಡಿಸಲಾಗಿದೆ.

1. ಜಲ ಸಂಬಂಧಿತ ಕಾರ್ಯಗಳು

2. ಗ್ರಾಮೀಣ ಭಾಗದ ಮೂಲಸೌಕರ್ಯ ನಿರ್ಮಾಣ

3. ಜೀವನೋಪಾಯಕ್ಕೆ ಸಂಬಂಧಿತ ಮೂಲಸೌಕರ್ಯ ನಿರ್ಮಾಣ (ತರಬೇತಿ ಕೇಂದ್ರಗಳು, ಸಂತೆ ಮಾರುಕಟ್ಟೆ ನಿರ್ಮಾಣ, ಆಹಾರ ಸಂಗ್ರಹಿಸಲು ಸಲುವಾಗಿ ಕಟ್ಟಡ ನಿರ್ಮಾಣ, ಹೈನುಕಾರಿಕೆಗೆ ಸಂಬಂಧಿಸಿದ ಕಟ್ಟಡಗಳ ನಿರ್ಮಾಣ)

4. ವಿಪತ್ತು ತಡೆ ಸಂಬಂಧಿತ ನಿರ್ಮಾಣ ಕಾರ್ಯಗಳು (ನಿರಾಶ್ರಿತ ಶಿಬಿರಗಳ ನಿರ್ಮಾಣ, ಕೆರೆ-ಕಟ್ಟೆಗಳು ಉಕ್ಕಿ ಹರಿಯದಂಥ ನಿರ್ಮಾಣ ಕಾರ್ಯ, ನೈಸರ್ಗಿಕ ವಿಪತ್ತಿನಿಂದ ಹಾಳಾದ ರಸ್ತೆಗಳ ದುರಸ್ತಿ, ಬಿರುಗಾಳಿಯಿಂದ ನಾಶವಾದ ತೋಟ ಮತ್ತು ಮನೆ ಮರು ನಿರ್ಮಾಣ, ಕಾಳ್ಗಿಚ್ಚು ನಿಯಂತ್ರಣ ಕಾರ್ಯಗಳು)

ಬಯೊಮೆಟ್ರಿಕ್‌ ಕಡ್ಡಾಯ

*ಕಾರ್ಮಿಕರು, ಅಧಿಕಾರಿಗಳಿಗೆ ಬಯೊಮೆಟ್ರಿಕ್‌ ದೃಢೀಕರಣ ಕಡ್ಡಾಯ

*ಕೆಲಸದ ಮೇಲೆ ನಿಗಾ ಇರಿಸಲು, ಕೆಲಸದ ಸ್ಥಳದ ಡಿಜಿಟಲ್‌ ಮ್ಯಾಪಿಂಗ್‌, ಉಪಗ್ರಹ ಚಿತ್ರಗಳು ಸೇರಿದಂತೆ ಇತರೆ ಜಿಯೊಸ್ಪೇಷಿಯಲ್‌ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು

*ಕೆಲಸಕ್ಕಾಗಿ ಮೊಬೈಲ್‌ನಲ್ಲಿ ಅರ್ಜಿ ಸಲ್ಲಿಸಬೇಕು, ಯಾವ ಕೆಲಸವಾಗಬೇಕು, ಎಷ್ಟು ಜನ ಕೆಲಸಕ್ಕೆ ಬಂದಿದ್ದಾರೆ ಎಂಬುದನ್ನು ದಾಖಲಿಸಬೇಕು, ದಿನಗೂಲಿ ನೀಡಿಕೆ, ಕೆಲಸದ ಪ್ರಗತಿ ಮೇಲೆ ನಿಗಾ ಇಡುವುದಕ್ಕೆ ಡ್ಯಾಶ್‌ಬೋರ್ಡ್‌ ಮೂಲಕ ಮೇಲ್ವಿಚಾರಣೆ ನಡೆಸಬೇಕು

*ಕೆಲಸದ ಪ್ರಗತಿ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಡಿಜಿಟಲ್‌ ವೇದಿಕೆ ಮೂಲಕವೂ ಮಾಹಿತಿ ನೀಡಬೇಕು. ತಪಾಸಣೆ ಕೈಗೊಂಡ ಬಗ್ಗೆ, ಹಣ ಪಾವತಿಯಾದ ಬಗ್ಗೆ, ಸಂಬಂಧಪಟ್ಟ ಅಧಿಕಾರಿಗಳ ಹೆಸರು ಸೇರಿ ಎಲ್ಲ ಮಾಹಿತಿಯನ್ನು ನೀಡಬೇಕು.

'ರಾಮನ ಹೆಸರಲ್ಲಿ ದಂಡನೆ'

ಕೇರಳದ ಸಂಸದ ಜಾನ್‌ ಬ್ರಿಟ್ಟಾಸ್ ಅವರು ಹೊಸ ಮಸೂದೆ ಕುರಿತು ಎಕ್ಸ್‌ ಪೋಸ್ಟ್‌ ಮಾಡಿ ನರೇಗಾದ ಈಗಿನ ಸ್ವರೂಪ ಹಾಗೂ ಹೊಸ ಕಾಯ್ದೆ ಜಾರಿಗೆ ಬಂದರೆ ಆಗುವ ಬದಲಾವಣೆಗಳ ಕುರಿತು ವ್ಯಕ್ತಪಡಿಸಿದ ಅಭಿಪ್ರಾಯ ಇಲ್ಲಿದೆ:

ನರೇಗಾ ಯೋಜನೆಯ ಹೆಸರಿನಿಂದ ಮಹಾತ್ಮ ಗಾಂಧಿ ಅವರ ಹೆಸರು ತೆಗೆದುಹಾಕಿರುವುದು ಟ್ರೇಲರ್‌ ಮಾತ್ರ. ಈ ಮಸೂದೆಯಿಂದಾಗುವ ಹಾನಿಯು ತೀವ್ರವಾಗಿದೆ. ಹಕ್ಕು ಕೇಂದ್ರಿತವಾಗಿದ್ದ ಕಾನೂನನ್ನು ಷರತ್ತುಬದ್ಧ, ಕೇಂದ್ರ ಸರ್ಕಾರದ ಹಿಡಿತದ ಕಾನೂನಾಗಿ ಬದಲಾಯಿಸಲಾಗಿದೆ. ಈ ಕಾಯ್ದೆಯು ರಾಜ್ಯ ಸರ್ಕಾರ ಮತ್ತು ಕಾರ್ಮಿಕರ ಹಿತಾಸಕ್ತಿ ವಿರುದ್ಧ ಇದೆ. ಈ ಮಸೂದೆಯು ನರೇಗಾ ಯೋಜನೆಯ ಹೆಸರನ್ನು ಮಾತ್ರವೇ ಬದಲಾಯಿಸುತ್ತಿಲ್ಲ. ಬದಲಿಗೆ ಯೋಜನೆಯನ್ನು ಆರ್ಥಿಕವಾಗಿ, ಸಾಂಸ್ಥಿಕವಾಗಿ ಮತ್ತು ನೈತಿಕವಾಗಿ ಕೆಡವಲಾಗುತ್ತಿದೆ.

ಸತ್ಯ ಸಂಗತಿ ಏನೆಂದರೆ, ರಾಮನ ಹೆಸರಿನಲ್ಲಿ ರಾಜ್ಯಗಳು ಮತ್ತು ಬಡವರನ್ನು ದಂಡಿಸಲಾಗುತ್ತಿದೆ, ಮೋಸಗೊಳಿಸಲಾಗುತ್ತಿದೆ ಮತ್ತು ಆರ್ಥಿಕವಾಗಿ ತ್ಯಾಗ ಮಾಡಲು ಹೇರಲಾಗುತ್ತಿದೆ.

* 125 ಕೆಲಸದ ದಿನಗಳು ಎನ್ನುವುದು ತಲೆಬರಹ ಮಾತ್ರ. 60:40 ಅನುಪಾತದಲ್ಲಿ ಅನುದಾನ ಹಂಚಿಕೆ ಮಾಡಲಾಗುತ್ತದೆ ಎನ್ನುವುದನ್ನು ಸಣ್ಣದಾಗಿ ಒಳಗೆ ಸೇರಿಸಲಾಗಿದೆ: ನರೇಗಾಕ್ಕೆ ಕೇಂದ್ರ ಸರ್ಕಾರವೇ ಪೂರ್ಣ ಪ್ರಮಾಣದಲ್ಲಿ ಅನುದಾನ ನೀಡುತ್ತದೆ. ಆದರೆ, ಹೊಸ ಮಸೂದೆಯ ಪ್ರಕಾರ, ರಾಜ್ಯ ಸರ್ಕಾರವು ಶೇ 40ರಷ್ಟು ಅನುದಾನ ನೀಡಬೇಕು. ಅಂದರೆ, ರಾಜ್ಯ ಸರ್ಕಾರಗಳು ₹50 ಸಾವಿರ ಕೋಟಿಯನ್ನು ಹೆಚ್ಚುವರಿಯಾಗಿ ಖರ್ಚು ಮಾಡಬೇಕಾಗುತ್ತದೆ. ಅನುದಾನ ನೀಡುವ ಜವಾಬ್ದಾರಿಯನ್ನು ರಹಸ್ಯ ವಿಧಾನದಲ್ಲಿ ರಾಜ್ಯ ಸರ್ಕಾರಗಳ ತಲೆಮೇಲೆ ಹಾಕುವುದನ್ನು ಸುಧಾರಣೆ ಎನ್ನುವುದಿಲ್ಲ

* ನರೇಗಾವು ಬೇಡಿಕೆ ಕೇಂದ್ರಿತವಾಗಿತ್ತು: ಒಂದು ವೇಳೆ ಕಾರ್ಮಿಕನು ಕೆಲಸ ಬೇಕು ಎಂದು ಕೇಳಿದರೆ, ಕೇಂದ್ರ ಸರ್ಕಾರವು ಅದಕ್ಕೆ ಹಣ ನೀಡಬೇಕಿತ್ತು. ಆದರೆ, ಹೊಸ ಮಸೂದೆಯಲ್ಲಿ ಈ ಅವಕಾಶವನ್ನು ಕಿತ್ತುಕೊಂಡು, ಪೂರ್ವ ನಿಗದಿತ ನಿಯಮಾನುಸಾರ ಹಂಚಿಕೆ ಮತ್ತು ಗರಿಷ್ಠ ಮಿತಿಯನ್ನು ಹೇರಲಾಗಿದೆ. ಒಮ್ಮೆ ಕೇಂದ್ರ ಸರ್ಕಾರ ನೀಡಿದ ಅನುದಾನ ಮುಗಿದರೆ, ಜನರ ಹಕ್ಕು ಮೊಟಕುಗೊಳ್ಳುತ್ತದೆ

* ಪಂಚಾಯಿತಿಗಳನ್ನು ಬದಿಗೊತ್ತಿ, ಡ್ಯಾಶ್‌ಬೋರ್ಡ್‌ಗಳಿಗೆ ಅಧಿಕಾರ ನೀಡಿಕೆ: ಸ್ಥಳೀಯವಾದ ಅಗತ್ಯಕ್ಕೆ ತಕ್ಕಂತೆ ಗ್ರಾಮ ಸಭೆ ಮತ್ತು ಪಂಚಾಯಿತಿಗಳು ಕೆಲಸದ ಯೋಜನೆ ರೂಪಿಸುತ್ತಿದ್ದವು. ಆದರೆ, ಈಗ ಜಿಐಎಸ್‌ ತಂತ್ರಾಂಶ, ಪಿಎಂ ಗತಿ ಶಕ್ತಿ ದತ್ತಾಂಶಗಳ ಮೇಲೆ ಯೋಜನೆಗಳು ರೂಪುಗೊಳ್ಳುತ್ತವೆ. ಬಯೊಮೆಟ್ರಿಕ್‌, ಜಿಯೊ ಟ್ಯಾಗಿಂಗ್‌, ಡ್ಯಾಶ್‌ಬೋರ್ಡ್‌, ಕೃತಕ ಬುದ್ಧಿಮತ್ತೆ ಸಹಾಯದಿಂದ ಮಾಡುವ ಲೆಕ್ಕಪರಿಶೋಧನೆಯನ್ನು ಕಡ್ಡಾಯ ಮಾಡಲಾಗಿದೆ. ತಂತ್ರಜ್ಞಾನ ಕೈಕೊಟ್ಟರೆ ಗ್ರಾಮೀಣ ಭಾಗದ ಕೋಟಿಗಟ್ಟಲೆ ಜನರು ಕೆಲಸದಿಂದ ವಂಚಿತರಾಗುತ್ತಾರೆ

* ಇನ್ನೂ ಕೆಟ್ಟ ಅಂಶವೇನೆಂದರೆ, ನೆಟ್ಟಿ-ಕಟಾವು ಎಂಬ ಕೃಷಿ ಋತುವಿನ ಹೆಸರಿನಲ್ಲಿ 60 ಕೆಲಸ ದಿನಗಳನ್ನು ಕಡಿತ ಮಾಡಲಾಗಿದೆ. ಇದು ಕಾರ್ಮಿಕ ಗ್ಯಾರಂಟಿಯೊ ಕಾರ್ಮಿಕ ನಿಯಂತ್ರಣವೊ? ನೀವು ಕೆಲಸ ಮಾಡಬೇಡಿ, ಹಣ ಗಳಿಸಬೇಡಿ ಎಂದು ಕಾನೂನುಬದ್ಧವಾಗಿ ಕೇಂದ್ರ ಸರ್ಕಾರ ಹೇಳಿದಂತಾಗಿದೆ.

ಕೇಂದ್ರ ಹೇಳುವುದೇನು?

ಕೌಶಲರಹಿತ ಕೂಲಿ ಕೆಲಸ ಮಾಡಲು ಸ್ವಯಂಪ್ರೇರಿತರಾಗಿ ಬರುವ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬದ ಪ್ರತಿ ವಯಸ್ಕ ವ್ಯಕ್ತಿಗೆ ಪ್ರತಿ ಹಣಕಾಸು ವರ್ಷದಲ್ಲಿ 125 ದಿನಗಳ ಕೆಲಸಕ್ಕೆ ಶಾಸನಬದ್ಧ ಖಾತರಿ ನೀಡುವುದು ಈ ಕಾಯ್ದೆಯ ಉದ್ದೇಶ. 2047ರ ಹೊತ್ತಿಗೆ ವಿಕಸಿತ ಭಾರತದ ಮುನ್ನೋಟಕ್ಕೆ ಅನುಗುಣವಾಗಿ ಗ್ರಾಮೀಣ ಚೌಕಟ್ಟನ್ನು ರೂಪಿಸಲು ಈ ಕಾಯ್ದೆ ಸಿದ್ಧಪಡಿಸಲಾಗಿದೆ. ಸಮೃದ್ಧ ಮತ್ತು ಚೈತನ್ಯಯುತ ಗ್ರಾಮೀಣ ಭಾರತಕ್ಕಾಗಿ ಸಶಕ್ತೀಕರಣ, ಪ್ರಗತಿ, ಸಮನ್ವಯ ಮತ್ತು ಪರಿಪೂರ್ಣತೆಯನ್ನು ಸಾಧಿಸುವ ಉದ್ದೇಶವನ್ನೂ ಇದು ಹೊಂದಿದೆ.

ಸಪ್ತಗಿರಿ ಉಲಾಕಾ, ಸಂಸದ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸದೀಯ ಸ್ಥಾಯಿ ಸಮಿತಿಯ ಮುಖ್ಯಸ್ಥ ಬಿಜೆಪಿಯು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ, ಪ್ರಧಾನಿ ಮೋದಿ ಅವರು ನರೇಗಾವನ್ನು 'ಗುಂಡಿ ತೋಡುವ ಯೋಜನೆ' ಎಂದು ಜರಿದಿದ್ದರು. ಕೆಲಸದ ದಿನಗಳನ್ನು ಈಗ ಹೊಸ ಕಾಯ್ದೆ ತಂದಿದ್ದಾರೆಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷನರೇಗಾ ಹೆಸರು ಬದಲಾವಣೆಯಲ್ಲ, ಇದು ಯೋಜನೆಯನ್ನೇ ಅಂತ್ಯಗೊಳಿಸುವ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಹುನ್ನಾರ. ಕೇಂದ್ರವು ಬಡವರ ಹಕ್ಕುಗಳನ್ನು ಒತ್ತಾಯಪೂರ್ವಕವಾಗಿ ಕಿತ್ತುಕೊಳ್ಳುತ್ತಿದೆಡೆರೆಕ್ ಒಬ್ರಯಾನ್‌, ಟಿಎಂಸಿ ಸಂಸದ ಮಹಾತ್ಮ ಗಾಂಧಿ ಅವರನ್ನು ಕೊಂದವನಿಗೆ ಹೀರೊ ಪಟ್ಟ ಕಟ್ಟಿ ಪೂಜಿಸಿದಂಥವರು ಇವರು. ಈಗ ಮಹಾತ್ಮನನ್ನು ಇತಿಹಾಸದಿಂದಲೇ ತೆಗೆದುಹಾಕಲು ಮುಂದಾಗಿದ್ದಾರೆಎಂ.ಎ.ಬೇಬಿ, ಸಿಪಿಎಂ ಪ್ರಧಾನ ಕಾರ್ಯದರ್ಶಿಈ ಯೋಜನೆಯಲ್ಲಿ ಕೇಂದ್ರದ ಪಾಲನ್ನು ಗಣನೀಯ ಪ್ರಮಾಣದಲ್ಲಿ ಕಡಿತ ಮಾಡಲಾಗಿದೆ. ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳಿಗೆ ಅನುದಾನ ಕಡಿಮೆ ಮಾಡಲೂ ಇದರಲ್ಲಿ ಅವಕಾಶವಿದೆ

]]>
Tue, 16 Dec 2025 13:51:10 +0530 shivuagrico
ಪಹಣಿಗೆ ಆಧಾರ್ ಜೋಡಣೆಯಿಂದ ರೈತರಿಗಾಗುವ ಅನುಕೂಲಗಳೇನು.? Aadhaar ಲಿಂಕ್ ಆಗಿರುವುದನ್ನು ಚೆಕ್ ಮಾಡುವುದು ಹೇಗೆ? https://krushirushi.in/What-are-the-benefits-of-linking-Aadhaar-with-Pahani-for-farmers https://krushirushi.in/What-are-the-benefits-of-linking-Aadhaar-with-Pahani-for-farmers ಕಂದಾಯ ಇಲಾಖೆ ಪ್ರಕಟಣೆಯ ಪ್ರಕಾರ, ರೈತರು ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್ ಪಹಣಿಗಳಿಗೆ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಲಿಂಕ್ ಮಾಡಿಕೊಳ್ಳಬೇಕು. ಗ್ರಾಮೀಣ ಮಟ್ಟದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಆಂದೋಲನ ಮಾದರಿಯಲ್ಲಿ RTCಗಳಿಗೆ ಆಧಾರ್ ಲಿಂಕ್ ಮಾಡುವ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪಹಣಿಗೆ ಆಧಾರ್‌ ಜೋಡಣೆ ಪ್ರಕ್ರಿಯೆಯಿಂದ ರಾಜ್ಯದಲ್ಲಿನ ಕೃಷಿ ಭೂಮಿ, ಕೃಷಿಕರು, ಭೂಮಿ ಬಳಕೆ ಉದ್ದೇಶ, ಭೂಮಿಯ ಸ್ವರೂಪ ಬದಲಾವಣೆಯಂತಹ ಅಂಶಗಳನ್ನು ನಿಖರವಾಗಿ ಗುರುತಿಸಲು ಅನುಕೂಲವಾಗಲಿದೆ. ಪಹಣಿಗೆ ಆಧಾರ್‌ ಜೋಡಣೆ ಪ್ರಕ್ರಿಯೆಗೆ ರೈತರು ಸ್ವಯಂಪ್ರೇರಿತವಾಗಿ ಸಹಕರಿಸಬೇಕು. ಇದರಿಂದ ತಮ್ಮ ಭೂಮಿ ಸುರಕ್ಷತೆ ಹೆಚ್ಚಿಸಿಕೊಳ್ಳುವ ಜತೆಗೆ ನಾನಾ ಸವಲತ್ತು ಪಡೆಯಲು ಅನುಕೂಲವಾಗಲಿದೆ

ಪ್ರಯೋಜನಗಳು

* ಯಾರದ್ದೋ ಆಸ್ತಿಯನ್ನು ಯಾರೋ ಅಕ್ರಮವಾಗಿ ಮಾರಾಟ ಮಾಡುವುದಕ್ಕೆ ಕಡಿವಾಣ

* ಕೃಷಿ ಭೂಮಿಯಲ್ಲಿ ಏನೇ ಬದಲಾವಣೆಗಳಾದರೂ ತಕ್ಷಣ ಮಾಹಿತಿ ಲಭ್ಯ

* ಮೂಲ ಮಾಲೀಕರ ಸಮ್ಮತಿ ಇಲ್ಲದೆ ಭೂಮಿ ಪರಭಾರೆ ಸಾಧ್ಯವಿಲ್ಲ

* ಕೃಷಿ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್‌ ಸಂಪರ್ಕಕ್ಕೂ ಆಧಾರವಾಗಿ ಪರಿಗಣಿಸಬಹುದು

* ಬೆಳೆ ನಷ್ಟ ಸಮೀಕ್ಷೆ- ಪರಿಹಾರಕ್ಕೆ ಬಳಸುವ 'ಫ್ರೂಟ್ಸ್‌' ಆಯಪ್‌ಗೂ ಸಹಕಾರಿ

* ಅರ್ಹ ರೈತರಿಗೆ ನಾನಾ ಸವಲತ್ತು ತಲುಪಿಸಲು ಉಪಯುಕ್ತ

ಆಧಾರ್ ಲಿಂಕ್ ಅಗತ್ಯವಿರುವ ಕಾರಣಗಳು:

ಜಮೀನಿನ ನೈಜ ಮಾಲೀಕತ್ವ ಖಚಿತಪಡಿಸಿಕೊಳ್ಳಲು:

ನಿಖರವಾದ ಆಕಾರ್‌ಬಂಡ್ ಮಾಹಿತಿಯಿಲ್ಲದೆ RTC/ಪಹಣಿಗೆ ಆಧಾರ್ ಲಿಂಕ್ ಸಾಧ್ಯವಿಲ್ಲ.

ಬಾಕಿ ಪೋಡಿ ಅಥವಾ ದುರಸ್ತಿ ಪ್ರಕರಣಗಳನ್ನು ನಿರ್ವಹಿಸಲು ನಿಖರ ಮಾಹಿತಿ ಅಗತ್ಯ.

ಡಿಜಿಟಲೀಕರಣ ಯೋಜನೆ:

ಮುಂದಿನ 2 ತಿಂಗಳಲ್ಲಿ 65 ಲಕ್ಷ ಆಕಾರ್‌ಬಂಡ್ ಡಿಜಿಟಲೀಕರಣಗೊಳ್ಳಲಿದೆ.

ಈ ಕಾರ್ಯಕ್ಕಾಗಿ ಪಹಣಿ/RTC ಗೆ ಆಧಾರ್ ಲಿಂಕ್ ಮಾಡುವುದು ಮುಖ್ಯ.

ರೈತರಿಗೆ ಸಹಾಯ:

ಕಂದಾಯ ಇಲಾಖೆ ರೈತರ ಜಮೀನಿನ ದಾಖಲೆಗಳನ್ನು ಡಿಜಿಟಲ್ ಮಾದರಿಯಲ್ಲಿ ಸಂಗ್ರಹಿಸಬಹುದು.

ಪಹಣಿ/RTC/ಉತಾರ್ ಗೆ ಆಧಾರ್ ಲಿಂಕ್ ಸ್ಥಿತಿ ಪರಿಶೀಲಿಸುವ ವಿಧಾನ:

Step 1:

ಭೂಮಿ ವೆಬ್‌ಸೈಟ್‌ನಲ್ಲಿ "RTC Aadhaar Link Status" ಲಿಂಕ್ ಕ್ಲಿಕ್ ಮಾಡಿ.

ಜಮೀನಿನ ಮಾಲೀಕರ ಮೊಬೈಲ್ ನಂಬರ್ ನಮೂದಿಸಿ, ಕ್ಯಾಪ್ಚ್ ಕೋಡ್ ಹಾಕಿ SEND OTP ಕ್ಲಿಕ್ ಮಾಡಿ.

ಮೊಬೈಲ್‌ಗೆ ಬಂದ 6 ಅಂಕಿಯ OTP ಹಾಕಿ LOGIN ಕ್ಲಿಕ್ ಮಾಡಿ.

Step 2:

ಅರ್ಜಿದಾರರ ಆಧಾರ್ ನಂಬರ್ ಮತ್ತು ಕಾರ್ಡಿನ ಹೆಸರನ್ನು ಭರ್ತಿ ಮಾಡಿ Verify ಕ್ಲಿಕ್ ಮಾಡಿ.

"ಆಧಾರ್ ಯಶಸ್ವಿಯಾಗಿ ಪರಿಶೀಲಿಸಲಾಗಿದೆ" ಎಂದು ಸಂದೇಶ ಕಾಣುತ್ತದೆ.

Step 3:

"ಆಧಾರ್ ಪರಿಶೀಲನೆಯನ್ನು ಬಳಸಿಕೊಂಡು ಅರ್ಜಿದಾರರ ವಿವರಗಳನ್ನು ಭರ್ತಿ ಮಾಡಿ" ಬಟನ್ ಕ್ಲಿಕ್ ಮಾಡಿ.

ಆಧಾರ್ ನಂಬರ್ ಹಾಕಿ OTP ಪಡೆಯಿರಿ, ಮೊಬೈಲ್‌ಗೆ ಬಂದ OTP ನಮೂದಿಸಿ ಸಲ್ಲಿಸು ಕ್ಲಿಕ್ ಮಾಡಿ.

Step 4:

ಮುಖಪುಟದ ಎಡಬದಿಯಲ್ಲಿ "Link Aadhaar" ಆಯ್ಕೆಯನ್ನು ಕ್ಲಿಕ್ ಮಾಡಿ.

ನಿಮ್ಮ ಸರ್ವೆ ನಂಬರ್ ಟಿಕ್ ಮಾಡಿ Link ಕ್ಲಿಕ್ ಮಾಡಿ.

ಮೊಬೈಲ್‌ಗೆ ಬಂದ OTP ನಮೂದಿಸಿ Yes/ಹೌದು ಕ್ಲಿಕ್ ಮಾಡಿದರೆ, "ಈ ಸರ್ವೆ ನಂಬರ್ ಈಗಾಗಲೇ ಲಿಂಕ್ ಆಗಿದೆ" ಎಂಬ ಸಂದೇಶ ಕಾಣಿಸುತ್ತೇ, ಪಹಣಿಗೆ ಆಧಾರ್ ಲಿಂಕ್ ಆಗಿರುವುದು ದೃಢವಾಗುತ್ತದೆ.

ಈ ಕ್ರಮದ ಮೂಲಕ ರೈತರು ತಮ್ಮ ಪಹಣಿ/RTC ಆಧಾರ್ ಲಿಂಕ್ ಆಗಿದೆಯೇ ಅಥವಾ ಇಲ್ಲವೆ ಎಂದು ಸುಲಭವಾಗಿ ಪರಿಶೀಲಿಸಬಹುದು.

]]>
Tue, 16 Dec 2025 11:24:33 +0530 shivuagrico
ಕ್ವಿಂಟಾಲ್ ಗೆ 71 ಸಾವಿರ ರೂ. ಗಡಿ ದಾಟಿದ ಕೆಂಪು ಮೆಣಸಿನಕಾಯಿ ದರ https://krushirushi.in/Red-chilli-prices-cross-71,000-per-quintal. https://krushirushi.in/Red-chilli-prices-cross-71,000-per-quintal. ಏರುಗತಿಯಲ್ಲಿ ಸಾಗುತ್ತಿರುವ ಕೆಂಪು ಮೆಣಸಿನಕಾಯಿ ದರ ಕ್ವಿಂಟಾಲ್ ಗೆ 71 ಸಾವಿರ ರೂಪಾಯಿ ಗಡಿ ದಾಟಿದೆ.

ಶನಿವಾರ ಹುಬ್ಬಳ್ಳಿಯ ಎಪಿಎಂಸಿಯಲ್ಲಿ ಕೆಂಪು ಮೆಣಸಿನಕಾಯಿ ದರ 70 ಸಾವಿರ ರೂ.ಗಿಂತಲೂ ಹೆಚ್ಚಿನ ಬೆಲೆಗೆ ಮಾರಾಟವಾಗಿದೆ. ಇದು ಈ ವರ್ಷದ ಸೀಸನ್ ಆರಂಭದ ಗರಿಷ್ಠ ದರವಾಗಿದೆ.

ಮುಂದಿನ ದಿನಗಳಲ್ಲಿ ಒಂದು ಕ್ವಿಂಟಾಲ್ ಕೆಂಪು ಮೆಣಸಿನಕಾಯಿ ದರ ಒಂದು ಲಕ್ಷ ರೂ.ಗೆ ತಲುಪಬಹುದು ಎನ್ನಲಾಗಿದೆ.

ಬ್ಯಾಡಗಿ ತಳಿಯ ಡಬ್ಬಿ ಮತ್ತು ಕಡ್ಡಿ ಮೆಣಸಿನ ಕಾಯಿ ಹೆಚ್ಚಿನ ಪ್ರಮಾಣದಲ್ಲಿ ಮಾರಾಟಕ್ಕೆ ಎಪಿಎಂಸಿಗೆ ಬರುತ್ತಿದೆ. ಶನಿವಾರ 1400 ಕ್ವಿಂಟಾಲ್ ಮೆಣಸಿನಕಾಯಿ ಆವಕವಾಗಿತ್ತು. ಕುಂದಗೋಳ ಪ್ರದೇಶದಲ್ಲಿ ಬೆಳೆಯುವ ಕಡ್ಡಿ ತಳಿಯ ಮೆಣಸಿನಕಾಯಿಗೆ ಅಂಗಡಿಯೊಂದರಲ್ಲಿ ಕ್ವಿಂಟಾಲ್ ಗೆ 53,119 ರೂ., ಡಬ್ಬಿ ತಳಿ ಮೆಣಸಿನಕಾಯಿಗೆ 71,333 ರೂಪಾಯಿ ಗರಿಷ್ಠ ದರ ಲಭ್ಯವಾಗಿದೆ. ಬೇರೆ ಕಡೆಗಳಿಂದ ಹುಬ್ಬಳ್ಳಿ ಎಪಿಎಂಸಿಗೆ ಬರುವ ಖರೀದಿದಾರರು ಟೆಂಡರ್ ಹಾಕುತ್ತಿರುವುದರಿಂದ ಬೆಳೆಗಾರರಿಗೆ ಉತ್ತಮ ದರ ಸಿಗುತ್ತಿದೆ.

]]>
Mon, 15 Dec 2025 12:45:53 +0530 shivuagrico
Dbt Karnataka&ರಾಜ್ಯ ಸರ್ಕಾರದಿಂದ ಬೆಳೆ ಹಾನಿ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ https://krushirushi.in/Dbt-karnataka-2330 https://krushirushi.in/Dbt-karnataka-2330

Dbt Karnataka-ರಾಜ್ಯ ಸರ್ಕಾರದಿಂದ ಬೆಳೆ ಹಾನಿ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ

ಮುಂಗಾರು ಹಂಗಾಮಿನಲ್ಲಾದ ಅತಿವೃಷ್ಟಿಯಿಂದ ಬೆಳೆನಷ್ಟ ಅನುಭವಿಸಿದ 27 ಜಿಲ್ಲೆಗಳ 14.24 ಲಕ್ಷ ರೈತರಿಗೆ ರಾಜ್ಯ ಸರ್ಕಾರ ₹1,033.60 ಕೋಟಿ ಪರಿಹಾರ ನೀಡಿದ್ದು, ಎಲ್ಲ ರೈತರ ಬ್ಯಾಂಕ್‌ ಖಾತೆಗಳಿಗೆ 24 ಗಂಟೆಗಳಲ್ಲಿ ಈ ಮೊತ್ತ ಜಮೆಯಾಗಲಿದೆ.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ರಾಜ್ಯ ವಿಪತ್ತು ನಿರ್ವಹಣಾ ನಿಧಿಯ (ಎಸ್‌ಡಿಆರ್‌ಎಫ್‌) ₹1,218 ಕೋಟಿ ಮೊತ್ತದ ಹೊರತಾಗಿ ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್‌ಗೆ ₹8,500 ಹೆಚ್ಚುವರಿ ಪರಿಹಾರ ಘೋಷಿಸಿದೆ. ಈ ವಿಶೇಷ ಪ್ಯಾಕೇಜ್‌ ವಿತರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.

ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಂಗಾರಿನಲ್ಲಿ 82.56 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಜೂನ್‌ನಿಂದ ಸೆಪ್ಟಂಬರ್‌ ಅವಧಿಯಲ್ಲಿನ ಅತಿವೃಷ್ಟಿಯಿಂದ 14.58 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿತ್ತು. ₹10,748 ಕೋಟಿ ಹಾನಿ ಅಂದಾಜಿಸಲಾಗಿತ್ತು. ಮುಖ್ಯವಾಗಿ ತೊಗರಿ 5.36 ಲಕ್ಷ ಹೆಕ್ಟೇರ್‌, ಹೆಸರು ಕಾಳು 2.63 ಲಕ್ಷ ಹೆಕ್ಟೇರ್‌, ಹತ್ತಿ 2.68 ಲಕ್ಷ ಹೆಕ್ಟೇರ್‌ ಹಾಗೂ ಮೆಕ್ಕೆಜೋಳ 1.21 ಲಕ್ಷ ಹೆಕ್ಟೇರ್‌ ಹಾನಿಯಾಗಿರುವುದು ಜಂಟಿ ಸಮೀಕ್ಷೆಯಲ್ಲಿ ದೃಢಪಟ್ಟಿತ್ತು’ ಎಂದರು.

ಎಸ್‌ಡಿಆರ್‌ಎಫ್‌ ಮಾನದಂಡಗಳ ಪ್ರಕಾರ ಗರಿಷ್ಠ ಎರಡು ಹೆಕ್ಟೇರ್‌ಗೆ ಸೀಮಿತವಾಗಿ 14.24 ಲಕ್ಷ ರೈತರಿಗೆ ₹1,218.03 ಕೋಟಿ ಪರಿಹಾರ ವಿತರಿಸಲಾಗಿದೆ. ಈಗ ನೀಡುತ್ತಿರುವ ಹೆಚ್ಚುವರಿ ಪರಿಹಾರ ₹1,033.60 ಕೋಟಿ ಸೇರಿ ಒಟ್ಟು ₹2,251.63 ಕೋಟಿ  ನೀಡಿದಂತಾಗುತ್ತದೆ.

Bele parihara-ನನ್ನ ಖಾತೆಗೆ 7,000 ಬೆಳೆ ಪರಿಹಾರ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Mon, 15 Dec 2025 07:11:02 +0530 shivuagrico
Bele vime& ಈ ಜಿಲ್ಲೆಯ 2.49 ಲಕ್ಷ ರೈತರಿಗೆ 559 ಕೋಟಿ ಬೆಳೆವಿಮೆ ಪರಿಹಾರ, ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/bele-vime-2329 https://krushirushi.in/bele-vime-2329 Bele vime- ಈ ಜಿಲ್ಲೆಯ 2.49 ಲಕ್ಷ ರೈತರಿಗೆ 559 ಕೋಟಿ ಬೆಳೆವಿಮೆ ಪರಿಹಾರ, ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ 


ರಾಜ್ಯದಲ್ಲಿ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಇತಿಹಾಸದಲ್ಲೇ ನೀಡದಂತಹ ಪರಿಹಾರವನ್ನು ರೈತರಿಗೆ ನೀಡಲಾಗಿದೆ. ಸುಮಾರು ೪೩ ಲಕ್ಷ ರೈತರಿಗೆ ವಿಮಾ ಮೂಲಕ ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಸಭೆಯಲ್ಲಿಂದು ಹೇಳಿದರು.


ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಅಲ್ಲಮಪ್ರಭು ಪಾಟೀಲ್ ರವರ ಪ್ರಶ್ನೆಗೆ ಉತ್ತರಿಸಿದ ಅವರು, ರೈತ ಸುರಕ್ಷತಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ೨೮ ಲಕ್ಷ ರೈತರನ್ನು ನೋಂದಾವಣೆ ಮಾಡಲಾಗಿದೆ. ರಾಜ್ಯದಲ್ಲಿ ಬೆಳೆ ನಷ್ಟವಾದ ೪೩ ಲಕ್ಷ ರೈತರಿಗೆ ಸುಮಾರು ೫ ಸಾವಿರ ಕೋಟಿಗೂ ಹೆಚ್ಚು ಪರಿಹಾರ ನೀಡಲಾಗಿದೆ. ಇತಿಹಾಸದಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಟ್ಟಿರಲಿಲ್ಲ ಎಂದರು.


ಅತಿವೃಷ್ಠಿ ಪರಿಹಾರ ಬೇರೆ, ಬೆಳೆ ಹಾನಿ ಪರಿಹಾರ ಬೇರೆ ಎಂದು ಹೇಳಿದ ಅವರು, ಫಸಲ್ ಭೀಮಾ ಯೋಜನೆಯಡಿ ರೈತರು ವಿಮಾ ಹಣದ ಶೇ. ೨ ರಷ್ಟನ್ನು ಮಾತ್ರ ಕಟ್ಟಬೇಕು. ಉಳಿದ ಶೇ. ೯೮ ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸುತ್ತದೆ ಎಂದು ಹೇಳಿದರು.


ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕಲ್ಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ೨೦೨೨-೨೩ನೇ ಸಾಲಿನಿಂದ ೨೦೨೫-೨೬ನೇ ಸಾಲಿನ ಮುಂಗಾರು ಹಂಗಾಮಿನವರೆಗೂ ಒಟ್ಟು ೨೩,೭೮೨ ರೈತರು ೩೧,೩೩೮.೧೩ ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆ ವಿಮೆಯಡಿ ನೋಂದಾಯಿಸಿಕೊಂಡಿದ್ದಾರೆ ಎಂದರು.


ಇದುವರೆಗೂ ಈ ಕ್ಷೇತ್ರ ವ್ಯಾಪ್ತಿಯಲ್ಲಿ ೧೩,೭೨೮ ರೈತರಿಗೆ ಬೆಳೆ ವಿಮೆ ಪರಿಹಾರ ನೀಡಲಾಗಿದೆ. ೯೪೫ ಪ್ರಕರಣಗಳು ಬಾಕಿಯಿದ್ದು, ಅವುಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡಲಾಗುವುದು. ವಿಮೆಯಡಿ ರೈತರಿಗೆ ಯಾವುದೇ ಬಾಕಿ ಇಲ್ಲದಂತೆ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುತ್ತದೆ ಎಂದು ಅವರು ಹೇಳಿದರು.

Parliament session 

ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಗೆ ಸಂಬಂಧಿಸಿದಂತೆ 2024-25ನೇ ಸಾಲಿಗೆ ಬೆಳೆ ವಿಮೆ ದಾವೆಗಳ ಕುರಿತು ರೈತರಿಂದ ಯಾವುದೇ ದೂರುಗಳನ್ನು ಸರ್ಕಾರ ಸ್ವೀಕರಿಸಿದೆಯೇ? ಬೆಳೆ ಹಾನಿಯನ್ನು ನಿಖರವಾಗಿ ಅಂದಾಜು ಮಾಡಲು ಸರ್ಕಾರ ಯಾವ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದೆ? ಕಳೆದ ಐದು ವರ್ಷಗಳಲ್ಲಿ ಕರ್ನಾಟಕದ ರೈತರಿಗೆ ಜಿಲ್ಲಾವಾರು ನೀಡಲಾದ ಬೆಳೆ ವಿಮೆಯ ವಿವರಗಳೇನು? ರೈತರಿಗೆ ಬೆಳೆ ವಿಮಾ ದಾವೆಗಳನ್ನು ಸಮಯಕ್ಕೆ ಸರಿಯಾಗಿ ಹಾಗೂ ಶೀಘ್ರವಾಗಿ ಪಾವತಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ವಿವರಗಳೇನು? ಎಂದು ಸಂಸದ ಗೊವಿಂದ ಕಾರಜೋಳ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಕೃಷಿ ಸಚಿವರಿಗೆ ಪ್ರಶ್ನೆ ಕೇಳಿದರು.

ಸಂಸದರ ಪ್ರಶ್ನೆಗೆ ಉತ್ತರ ನೀಡಿದ ರಾಮನಾಥ್ ಠಾಕೂರ್, ಚಿತ್ರದುರ್ಗ ಜಿಲ್ಲೆಯಲ್ಲಿ 2,48,212 ಲಕ್ಷ ರೈತರಿಗೆ 559.91 ಕೋಟಿ ರೂ. ವಿಮಾ ಹಣ ದೊರಕಿದೆ. ಅದೇ ರೀತಿ ರಾಜ್ಯದಲ್ಲಿ 1,29,95,086 ಕೋಟಿ ರೈತರು ವಿಮೆಗೆ ನೊಂದಣಿ ಮಾಡಿಸಿಕೊಂಡಿದ್ದು, 1,584 ಕೋಟಿ ವಿಮೆ ಪ್ರೀಮಿಯಮ್ ಪಾವತಿಸಿರುತ್ತಾರೆ. ರಾಜ್ಯದ ರೈತರಿಗೆ 10,000 ಕೋಟಿಯಷ್ಟು ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ವಿಮೆ ಪರಿಹಾರ ಸಿಕ್ಕಿದೆ ಎಂದು ತಿಳಿಸಿದ್ದಾರೆ.

 ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Mon, 15 Dec 2025 07:03:46 +0530 shivuagrico
Agriculture department subsidy schemes&ಕೃಷಿ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳ ಪಟ್ಟಿ https://krushirushi.in/Agriculture-department-subsidy-schemes-2328 https://krushirushi.in/Agriculture-department-subsidy-schemes-2328 Agriculture department subsidy schemes-ಕೃಷಿ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳ ಪಟ್ಟಿ

ಸರ್ಕಾರವು ರೈತರ ಅನುಕೂಲಕ್ಕಾಗಿ ಈ ಕೆಳಗಿನ ವಿವಿಧ ಯೋಜನೆ / ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುತ್ತಿದೆ.


ಇಲ್ಲಿದೆ ಸರ್ಕಾರದಿಂದ ರೈತರಿಗೆ ಸಿಗುವ ಸೌಲಭ್ಯಗಳ ಸಂಪೂರ್ಣ ಮಾಹಿತಿ

ಬೀಜಗಳ ಪೂರೈಕೆ: ಬೀಜಗಳ ಪೂರೈಕೆ ಯೋಜನೆಯಡಿ ರಾಜ್ಯದ ಎಲ್ಲಾ ವರ್ಗದ ರೈತರಿಗೆ ವಿವಿಧ ಕೃಷಿ ಬೆಳೆಗಳ ಪ್ರಮಾಣಿತ/ ನಿಜ ಚೀಟಿ ಬಿತ್ತನೆ ಬೀಜಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ. 50 ಹಾಗೂ ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಶೇ.75 ರ ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ.

ಕೃಷಿ ಯಾಂತ್ರೀಕರಣ: ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದಕ್ಕೆ ಅನುವು ಮಾಡಿಕೊಡಲು ಹಾಗೂ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ಸದರಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ.50 ಹಾಗೂ ಪ.ಜಾ./ಪ.ಪಂ. ರೈತರಿಗೆ ಶೇ.90 ರಂತೆ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.1.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತಿದೆ ಹಾಗೂ 45 ಪಿ.ಟಿ.ಒ ಹೆಚ್.ಪಿ ವರೆಗಿನ ಟ್ರಾಕ್ಟರ್ ಗಳಿಗೆ ಸಾಮಾನ್ಯ ವರ್ಗದ ರೈತರಿಗೆ ರೂ.0.75 ಲಕ್ಷ ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ರೈತರಿಗೆ ಶೇ.90 ರ ಗರಿಷ್ಠ ರೂ.3.00 ಲಕ್ಷ ಸಹಾಯಧನ ನೀಡಲಾಗುತ್ತಿದೆ.

ಕೃಷಿ ಸಂಸ್ಕರಣೆ: ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ಕೃಷಿ ಸಂಸ್ಕರಣಾ ಘಟಕಗಳು, ಟಾರ್ಪಾಲಿನ್ ಮತ್ತು ಸಣ್ಣ ಯಂತ್ರಚಾಲಿತ ಎಣ್ಣೆಗಾಣ ಘಟಕಗಳನ್ನು ಸಹಾಯಧನದಡಿ ರೈತರಿಗೆ ವಿತರಿಸಲಾಗುತ್ತಿದೆ. ಸದರಿ ಯೋಜನೆಯಡಿ ಕೃಷಿ ಸಂಸ್ಕರಣಾ ಘಟಕಗಳು ಮತ್ತು ಟಾರ್ಪಾಲಿನ್ ಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ.50ರಷ್ಟು ಮತ್ತು ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಶೇ.90ರಷ್ಟು ಸಹಾಯಧನದಡಿ ನೀಡಲಾಗುವುದು. ಸಣ್ಣ ಯಂತ್ರಚಾಲಿತ ಎಣ್ಣೆಗಾಣ ಘಟಕಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ.75 ಹಾಗೂ ಪ.ಜಾ./ಪ.ಪಂ., ರೈತರಿಗೆ ಶೇ.90 ರಂತೆ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.1.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತಿದೆ.

ಸೂಕ್ಷ್ಮ ನೀರಾವರಿ: ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಮಾರ್ಗಸೂಚಿ ಅನ್ವಯ ಸಣ್ಣ / ಅತಿ ಸಣ್ಣ ರೈತರಿಗೆ ಶೇ.55 ಮತ್ತು ಇತರೇ ವರ್ಗದ ರೈತರಿಗೆ ಶೇ.45 ರಷ್ಟು ಸಹಾಯಧನವನ್ನು ಪ್ರತಿಯೊಬ್ಬ ರೈತರಿಗೆ ಗರಿಷ್ಠ 5.0 ಹೆಕ್ಟೇರ್ ಪ್ರದೇಶದವರೆಗೆ ನೀಡಲು ಅವಕಾಶವಿರುತ್ತದೆ. ಇದರಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು 60:40 ಇದ್ದು, ರಾಜ್ಯದಲ್ಲಿ ರಾಜ್ಯ ಸರ್ಕಾರದ ವತಿಯಿಂದ ರಾಜ್ಯದ ಪಾಲಿನ ಹೆಚ್ಚುವರಿ ಸಹಾಯಧನವನ್ನು ಸೇರಿಸಿ, ಎಲ್ಲಾ ವರ್ಗದ ರೈತರಿಗೆ ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆಗೆ ಶೇ. 90ರ ಸಹಾಯಧನವನ್ನು ನೀಡಲಾಗುತ್ತಿದೆ.

ಸಸ್ಯ ಸಂರಕ್ಷಣೆ: ಶೇ.50ರ ರಿಯಾಯಿತಿ ದರದಲ್ಲಿ ಪೀಡೆನಾಶಕ/ಜೈವಿಕ ಪೀಡೆನಾಶಕ * ಹಾಗೂ ಜೈವಿಕ ನಿಯಂತ್ರಣಕಾರಕಗಳ ವಿತರಣೆ ಮಾಡಲಾಗುತ್ತಿದೆ.

ರೈತ ಸಿರಿ ಕಾರ್ಯಕ್ರಮದಡಿ ‌ ರಾಜ್ಯದಲ್ಲಿ ಸಿರಿಧಾನ್ಯಗಳ ಉತ್ಪಾದನೆಯನ್ನು ಪ್ರೋತ್ಸಾಹಿಸಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ಸಿರಿಧಾನ್ಯಗಳಾದ ನವಣೆ, ಹಾರಕ, ಕೊರಲೆ, ಸಾಮೆ, ಊದಲು, ಬರಗು ಬೆಳೆಗಳನ್ನು ಬೆಳೆದ ಎಲ್ಲಾ ವರ್ಗದ ರೈತರಿಗೆ ಪ್ರತಿ ಹೆಕ್ಟೇರಿಗೆ ರೂ.10000/-ದಂತೆ ಗರಿಷ್ಠ ಎರಡು ಹೆಕ್ಟೇ‌ರ್ ಪ್ರದೇಶದಲ್ಲಿ ಸಿರಿಧಾನ್ಯಗಳನ್ನು ಬೆಳೆದ ಎಲ್ಲಾ ರೈತರುಗಳಿಗೆ ಬೆಳೆ ಸಮೀಕ್ಷೆ ಆಧಾರದಂತೆ ಪ್ರೋತ್ಸಾಹಧನವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುವುದು.

ಸಾವಯವ ಇಂಗಾಲ ಅಭಿಯಾನ: ರಾಜ್ಯದ ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲದ ಪ್ರಮಾಣವನ್ನು ಹೆಚ್ಚಿಸಲು, ದ್ವಿದಳಧಾನ್ಯಗಳ ವಿಸ್ತೀರ್ಣ ಮತ್ತು ಉತ್ಪಾದನೆ ಹೆಚ್ಚಿಸುವ ಸಲುವಾಗಿ ಶೇ. 75ರ ರಿಯಾಯಿತಿ ದರದಲ್ಲಿ ಹಸಿರೆಲೆ ಗೊಬ್ಬರ ಬಿತ್ತನೆ ಬೀಜಗಳ ವಿತರಣೆ ಮಾಡಲಾಗುವುದು.

 ಬೆಂಬಲ ಬೆಲೆ: ಕೇಂದ್ರ ಸರ್ಕಾರವು ಪ್ರತಿ ವರ್ಷ ಮುಂಗಾರು ಹಾಗು ಹಿಂಗಾರುಹಂಗಾಮಿಗೆ ಮುಂಚಿತವಾಗಿ ಬೆಂಬಲ ಬೆಲೆ ಘೋಷಣೆ ಮಾಡುತ್ತಿದ್ದು, ಸಗಟು ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಯಲ್ಲಿ ಮಾರಾಟವಾಗುವ ಸಂದರ್ಭಗಳಲ್ಲಿ ಬೆಂಬಲ ಬೆಲೆಯಲ್ಲಿ ರೈತರಿಂದ ಉತ್ಪನ್ನಗಳನ್ನು ಖರೀದಿಸಲಾಗುತ್ತಿದೆ. ಅಲ್ಲದೆ, ಅವಶ್ಯಕ ಸಂದರ್ಭಗಳಲ್ಲಿ ಕೇಂದ್ರ ಸರ್ಕಾರ ಘೋಷಿಸಿದ ಬೆಂಬಲ ಬೆಲೆಯ ಜೊತಗೆ ರಾಜ್ಯ ಸರ್ಕಾರದ ಪ್ರೋತ್ಸಾಹಧನವನ್ನೂ ಸಹ ನೀಡಲಾಗುತ್ತಿದೆ.

 ಬೆಳೆ ವಿಮಾ ಯೋಜನೆ: ಈ ಯೋಜನೆಯಡಿ ಪ್ರಕೃತಿ ವಿಕೋಪಗಳು, ಕೀಟಗಳು ಮತ್ತು ರೋಗಗಳಿಂದಾಗಿ ಯಾವುದೇ ಅಧಿಸೂಚಿತ ಬೆಳೆ ವಿಫಲವಾದ ಪಕ್ಷದಲ್ಲಿ ರೈತರಿಗೆ ವಿಮಾ ರಕ್ಷಣೆ ಮತ್ತು ಹಣಕಾಸು ಬೆಂಬಲ ನೀಡಲಾಗುವುದು. ರೈತರಿಗೆ ನೀಡುವ ವಿಮಾ ಕಂತಿನ ರಿಯಾಯಿತಿಯಲ್ಲಿ ರಾಜ್ಯ ಸರ್ಕಾರದ ಪಾಲನ್ನು ನೀಡಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಅನುವು ಮಾಡಲಾಗುತ್ತಿದೆ.

ಪಿ.ಎಂ.ಕಿಸಾನ್ ಯೋಜನೆ: ಈ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಎಲ್ಲಾ ಅರ್ಹ ರೈತ ಕುಟುಂಬಗಳಿಗೆ ರೂ.6000 ಗಳನ್ನು 3 ಕಂತುಗಳಲ್ಲಿ ನೇರವಾಗಿ ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ.

]]>
Sun, 14 Dec 2025 07:42:08 +0530 shivuagrico
Bele parihara payment failed cases&44 ಸಾವಿರ ರೈತರಿಗಿಲ್ಲ ಬೆಳೆಪರಿಹಾರ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಸರಿಪಡಿಸಿಕೊಂಡರೆ 2&3 ದಿನಗಳಲ್ಲಿ ಜಮಾ ಆಗಲಿದೆ https://krushirushi.in/Bele-parihara-payment-failed-cases-2327 https://krushirushi.in/Bele-parihara-payment-failed-cases-2327 Bele parihara payment failed cases-44 ಸಾವಿರ ರೈತರಿಗಿಲ್ಲ ಬೆಳೆಪರಿಹಾರ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಸರಿಪಡಿಸಿಕೊಂಡರೆ 2-3 ದಿನಗಳಲ್ಲಿ ಜಮಾ ಆಗಲಿದೆ 

ರಾಜ್ಯದಲ್ಲಿ 44208 ರೈತರಿಗೆ ತಾಂತ್ರಿಕ ಕಾರಣದಿಂದ ಬೆಳೆ ಹಾನಿ ಪರಿಹಾರ ಪಾವತಿ ಮಾಡಿಲ್ಲ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು

ನಾವು ಈವರೆಗೆ 2300 ಕೋಟಿ ರೂ. ಬೆಳೆ ಹಾನಿ ಪರಿಹಾರವನ್ನು ವಿತರಿಸಿದ್ದೇವೆ.

ಉಳಿದಂತೆ ಬ್ಯಾಂಕ್‌ ಖಾತೆಯ ಹೆಸರಿರೂ ಆಧಾ‌ರ್ ನಲ್ಲಿರುವ ಹೆಸರು, ಅಕ್ಷರಗಳಿಗೆ ತಾಳೆಯಾಗದಿರುವ, ಫ್ರುಟ್ಸ್ ಗುರುತಿಗೂ ತಾಳೆ ಆಗದಿರುವ ಕೆಲವು ಪ್ರಕರಣಗಳಲ್ಲಿ ಹಣ ಬಿಡುಗಡೆಯಾಗಿಲ್ಲ.

ಫಲಾನುಭವಿಗಳು ಈ ಸಮಸ್ಯೆಯನ್ನು ಪರಿಹರಿಸಿಕೊಂಡರೆ ಎರಡೂರು ದಿನದಲ್ಲಿ ಅವರ ಖಾತೆಗೆ ಬೆಳೆಹಾನಿ ಪರಿಹಾರ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು. ಬೆಳೆ ವಿಮೆಯ ಬಗ್ಗೆ ಕೃಷಿ ಸಚಿವರ ಜೊತೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.

ತಿರಸ್ಕೃತ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment failed cases select ಮಾಡಿ Get reports ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಈ ಕೆಳಗಿನಂತೆ ಪರಿಹಾರ ವಿಫಲ ಪ್ರಕರಣಗಳ ಪಟ್ಟಿ ದೊರೆಯಲಿದೆ

ಅದೇ ರೀತಿ payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

]]>
Sat, 13 Dec 2025 08:06:21 +0530 shivuagrico
ಭಾಗ್ಯಲಕ್ಷ್ಮಿ' ಯೋಜನೆಯಡಿ ಜಿಲ್ಲೆಯಲ್ಲಿ ಮೊದಲ ಬಾರಿಗೆ 11,944 ಯುವತಿಯರು ಫಲಾನುಭವಿಗಳಾಗಿದ್ದಾರೆ. https://krushirushi.in/Bhagyalakshmi-Scheme-11,944-beneficiary https://krushirushi.in/Bhagyalakshmi-Scheme-11,944-beneficiary ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳಲ್ಲಿ ಹೆಣ್ಣು ಮಕ್ಕಳ ಜನನವನ್ನು ಪ್ರೋತ್ಸಾಹಿಸುವುದು ಮತ್ತು ಅವರ ಸ್ಥಾನಮಾನವನ್ನು ಸುಧಾರಿಸುವ ಧ್ಯೇಯೋದ್ದೇಶದಿಂದ ಜಾರಿಗೊಳಿಸಲಾಗಿದ್ದ 'ಭಾಗ್ಯಲಕ್ಷ್ಮಿ' ಯೋಜನೆಯಡಿ ಜಿಲ್ಲೆಯಲ್ಲಿ ಮೊದಲ ಬಾರಿಗೆ 11,944 ಯುವತಿಯರು ಫಲಾನುಭವಿಗಳಾಗಿದ್ದಾರೆ.

18 ವರ್ಷಗಳ ಹಿಂದೆ ರಾಜ್ಯದಲ್ಲಿ ಜಾರಿಗೊಳಿಸಿದ್ದ ಈ ಯೋಜನೆಯ ಲಾಭ ಈಗ ಬರುವುದಕ್ಕೆ ಆರಂಭವಾಗಿದೆ. ಆಗ ತಮ್ಮ ಹೆಣ್ಣು ಮಕ್ಕಳ ಕುರಿತು ನೋಂದಣಿ ಮಾಡಿಸಿ ಬಾಂಡ್‌ ಪಡೆದಿದ್ದವರು ಪ್ರಯೋಜನ ಗಳಿಸುತ್ತಿದ್ದಾರೆ. 'ಪರಿಪಕ್ವ' ಹಣವನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ.

ಜಿಲ್ಲೆಯಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ 2006-2007ನೇ ಸಾಲಿನಲ್ಲಿ ಜಾರಿಗೊಂಡಿತ್ತು. ಈಗ 18 ವರ್ಷ ಪೂರ್ಣಗೊಂಡ ಹೆಣ್ಣು ಮಕ್ಕಳಿಗೆ ಹಣ ಪಾವತಿಸಲಾಗುತ್ತಿದೆ. 2024ರಲ್ಲಿ ಅವಧಿ ಮುಗಿದಿರುವ ಒಟ್ಟು ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವ ಪ್ರಕ್ರಿಯೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಪ್ರಾರಂಭಿಸಿದೆ. ಇದು ಫಲಾನುಭವಿಗಳಿಗೆ ಶಿಕ್ಷಣ ಸೇರಿದಂತೆ ಹಲವು ರೀತಿಯಲ್ಲಿ ಅನುಕೂಲಕ್ಕೆ ಬರುತ್ತಿದೆ.

ನೇರವಾಗಿ ಜಮಾ:

'ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಫಲಾನುಭವಿಗಳಿಗೆ ಹಣವನ್ನು ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗೆ ಪಾವತಿಸುತ್ತಿದೆ. ಆಗ ಬಾಂಡ್‌ ಪಡೆದಿದ್ದವರಿಗೆ ಮೊದಲಿಗೆ ₹ 32ಸಾವಿರವನ್ನು ಪಾವತಿಸಲಾಗುತ್ತಿದೆ. ಎಲ್ಲರ ಮಾಹಿತಿಯನ್ನೂ ಸಂಗ್ರಹಿಸಿ ದಾಖಲೆಗಳ ಸಹಿತ ನಿಗದಿತ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದೇವೆ. 9,713 ಮಂದಿಯ ಮಾಹಿತಿಯನ್ನು ದಾಖಲಿಸಲಾಗಿದೆ. ಅವರಿಗೆ ಪರಿಪಕ್ವ ಹಣ ಸಂದಾಯವಾಗಿದೆ. ಉಳಿದವರಿಗೂ ಹಂತ-ಹಂತವಾಗಿ ಹಣ ದೊರೆಯಲಿದೆ' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ.ಬಸವರಾಜು 'ಪ್ರಜಾವಾಣಿ'ಗೆ ಮಾಹಿತಿ ನೀಡಿದರು.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ, ಕುಟುಂಬ ಮತ್ತು ಸಮಾಜದಲ್ಲಿ ಹೆಣ್ಣು ಮಗುವಿನ ಘನತೆ ಹೆಚ್ಚಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಿದ್ದರು. 2006-07ರಲ್ಲಿ ನೋಂದಣಿ ಮಾಡಿಸಿದವರಿಗೆ 18 ವರ್ಷ ಪೂರೈಸಿದ ನಂತರ ₹32,351 ದೊರೆಯಲಿದೆ. 2008ರ ಆ.1ರಿಂದ 2020ರ ಮಾರ್ಚ್ ಅಂತ್ಯದವರೆಗಿನ ಅವಧಿಯಲ್ಲಿ ನೋಂದಾಯಿಸಿದವರಿಗೆ ಸಿಗುವ ಅಂದಾಜು ಮೊತ್ತವನ್ನು ₹1 ಲಕ್ಷಕ್ಕೆ ಏರಿಕೆ ಮಾಡಲಾಯಿತು. ಅದು ಪರಿಪಕ್ವಗೊಂಡಾಗ ಫಲಾನುಭವಿಗಳಿಗೆ ಹಣ ದೊರೆಯುತ್ತದೆ ಎಂದು ಅಧಿಕಾರಿಗಳು ಹೇಳಿದರು.

'ನೋಂದಣಿಯಾದ ಹೆಣ್ಣುಮಕ್ಕಳು ಕಡ್ಡಾಯವಾಗಿ 9ನೇ ತರಗತಿವರೆಗೆ ಶಿಕ್ಷಣ ಪಡೆದಿರಬೇಕು. ಬಾಲಕಾರ್ಮಿಕರಾಗಿರಬಾರದು, ಬಾಲ್ಯವಿವಾಹ ಆಗಿರಬಾರದು, ಪಾಲಕರು ಕಡ್ಡಾಯವಾಗಿ ಎರಡು ಮಕ್ಕಳನ್ನು ಮಾತ್ರ ಹೊಂದಿರಬೇಕು. ಹೆಚ್ಚು ಮಕ್ಕಳು ಇದ್ದಲ್ಲಿ ಅವರು ಯೋಜನೆಯಿಂದ ವಂಚಿತರಾಗುತ್ತಾರೆ' ಎಂದು ತಿಳಿಸಿದರು.

ಏನಿದು ಯೋಜನೆ?

ಹೆಣ್ಣು ಭ್ರೂಣ ಹತ್ಯೆ ತಡೆಯಲು ಬಾಲ್ಯವಿವಾಹ ಪದ್ಧತಿ ನಿಯಂತ್ರಿಸಲು ಹೆಣ್ಣು ಮಗುವಿನ ಶಿಕ್ಷಣ ಲಿಂಗಾನುಪಾತ ಉತ್ತಮಪಡಿಸಲು ಆರೋಗ್ಯಮಟ್ಟ ಉತ್ತಮಪಡಿಸಿ ಹೆಣ್ಣು ಮಕ್ಕಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತರಲಾಗಿತ್ತು. ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಸಿದ ಇಬ್ಬರು ಹೆಣ್ಣುಮಗುವಿಗೆ ಸರ್ಕಾರವು ನಿಶ್ಚಿತ ಠೇವಣಿ ಹೂಡಿ ಮಗುವಿಗೆ 18 ವರ್ಷ ಪೂರ್ಣಗೊಂಡ ನಂತರ ಬಡ್ಡಿ ಸಹಿತ ಪರಿಪಕ್ವ ಹಣ ನೀಡುವ ಉದ್ದೇಶದಿಂದ ಯೋಜನೆ ಆರಂಭಿಸಿತ್ತು. ಅದು ಈಗ 'ಫಲ' ಕೊಡುತ್ತಿದೆ.

]]>
Fri, 12 Dec 2025 16:23:52 +0530 shivuagrico
Crop loss compensation&14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಜಮಾ&ಕಂದಾಯ ಸಚಿವ ಕೃಷ್ಣಬೈರೆಗೌಡ https://krushirushi.in/Crop-loss-compensation-2325 https://krushirushi.in/Crop-loss-compensation-2325 Crop loss compensation-14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಜಮಾ-ಕಂದಾಯ ಸಚಿವ ಕೃಷ್ಣಬೈರೆಗೌಡ

 ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ಸದನಕ್ಕೆ ಈ ಮಾಹಿತಿ ನೀಡಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡು, ರಾಜ್ಯದಲ್ಲಿ 86.81 ಲಕ್ಷ ರೈತ ಕುಟುಂಬಗಳಿದ್ದು, 118.5 ಲಕ್ಷ ಹೆಕ್ಟೇರ್ ಮಳೆ ಆಶ್ರಿತ ಪ್ರದೇಶವಿದೆ. ಆದರೆ ರಾಜ್ಯದಲ್ಲಿ ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬುದಾಗಿ ಆರೋಪಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು, 2023 ರಲ್ಲಿ ಬರ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದಾಗ, ಕೇಂದ್ರ ಸರ್ಕಾರ ನೆರವಿಗೆ ಬರಲಿಲ್ಲ. ನಮ್ಮ ಸರ್ಕಾರ ಸುಪ್ರಿಂಕೋರ್ಟ್ ಮೊರೆಹೋಗಿ ಪರಿಹಾರ ಕೇಳುವ ಪ್ರಸಂಗ ಬರುವಂತಾಯಿತು.

ಪರಿಹಾರ ಅನುದಾನಕ್ಕಾಗಿ ಸುಪ್ರಿಂಕೊರ್ಟ್ ಮೊರೆಹೋಗಿ ಅನುದಾನ ಪಡೆದದ್ದು ದೇಶದ ಇತಿಹಾಸದಲ್ಲಿ ದಾಖಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಪರಿಹಾರವನ್ನು ನಮ್ಮ ಸರ್ಕಾರ ಕೊಟ್ಟಿದೆ. 38 ಲಕ್ಷ ರೈತರಿಗೆ ಸುಮಾರು 4300 ಕೋಟಿ ರೂ. ಪರಿಹಾರವನ್ನು ನಾವು ಕೊಟ್ಟಿದ್ದೇವೆ. ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ ಈಗಾಗಲೇ 2,249 ಕೋಟಿ ರೂ. ಪರಿಹಾರವನ್ನು ನೀಡಿದ್ದೇವೆ. ಸರ್ಕಾರದ ವೈಫಲ್ಯ ಇದ್ದರೆ ಟೀಕೆ ಮಾಡಲಿ, ಆದರೆ ಮಾಡಿದ ಕೆಲಸವನ್ನು ಮಾಡಿಯೇ ಇಲ್ಲ ಎಂದರೆ, ಅದನ್ನು ಕೇಳಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಮಾತನಾಡಿ, ಮುಖ್ಯಮಂತ್ರಿಗಳು ಈಗಾಗಲೇ ಕಂದಾಯ ಸಚಿವರೊಂದಿಗೆ ದೆಹಲಿಗೆ ತೆರಳಿ, ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ವರ್ಷ ರೈತರಿಗೆ ಪರಿಹಾರ ನೀಡಲು ಹಾಗೂ ಅತಿವೃಷ್ಟಿಯಿಂದ ಉಂಟಾದ ಆಸ್ತಿ ಪಾಸ್ತಿಗಳಿಗೆ ಪರಿಹಾರ ಮೊತ್ತ ಸೇರಿದಂತೆ ಕೇಂದ್ರ ಸರ್ಕಾರ ಇದುವರೆಗೂ ಯಾವುದೇ ಅನುದಾನ ಬಿಡುಗೆ ಮಾಡಿಲ್ಲ. ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿ ಅನುಭವಿಸಿದ ರೈತರಿಗೆ ವಿಪತ್ತು ಪರಿಹಾರದಲ್ಲಿನ ಮಾರ್ಗಸೂಚಿಗಿಂತಲೂ ಹೆಚ್ಚುವರಿಯಾಗಿ ಪರಿಹಾರ ಮೊತ್ತವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆ ಎಂದರು.

ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Fri, 12 Dec 2025 08:41:10 +0530 shivuagrico
ಕೃಷಿ ಜಮೀನು ಪರಿವರ್ತಿಸಲು `ಭೂ ಪರಿವರ್ತನೆ ನಿಯಮ' ಸರಳೀಕರಣ.! https://krushirushi.in/Agricultural-land-new-rules https://krushirushi.in/Agricultural-land-new-rules ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರ ಉತ್ತರ, ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ.

ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು.

ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ 2 ಎಕರೆವರೆಗೆ ಭೂ ಪರಿವರ್ತನೆಯ ಅವಶ್ಯಕತೆ ಇಲ್ಲದೆ ನೇರವಾಗಿ ಪ್ಲಾನ್ ಅಪ್ರೂವ್ ಮಾಡಿಸಿಕೊಳ್ಳಬಹುದಾಗಿದೆ ಹಾಗೂ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪರಿವರ್ತನೆ ಅಗತ್ಯವಿಲ್ಲ ಮತ್ತು ಕಂದಾಯ ನ್ಯಾಯಾಲಯ ನಡೆಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದರು.

https://x.com/KarnatakaVarthe/status/1998747412421091635?ref_src=twsrc%5Etfw%7Ctwcamp%5Etweetembed%7Ctwterm%5E1998747412421091635%7Ctwgr%5E5b81ae7d7c4846bd3e1d6723f035b2d823f40468%7Ctwcon%5Es1_c10&ref_url=https%3A%2F%2Fapi-news.dailyhunt.in%2F

]]>
Thu, 11 Dec 2025 14:32:58 +0530 shivuagrico
Bele vime&ಇಲ್ಲಿಯವರೆಗೆ 43 ಲಕ್ಷ ರೈತರಿಗೆ 5534 ಕೋಟಿ ಬೆಳೆವಿಮೆ ಹಣ ಬಿಡುಗಡೆ&ಕೃಷಿ ಸಚಿವ ಚೆಲುವರಾಯಸ್ವಾಮಿ https://krushirushi.in/Bele-vime-2323 https://krushirushi.in/Bele-vime-2323 Bele vime-ಇಲ್ಲಿಯವರೆಗೆ 43 ಲಕ್ಷ ರೈತರಿಗೆ 5534 ಕೋಟಿ ಬೆಳೆವಿಮೆ ಹಣ ಬಿಡುಗಡೆ-ಕೃಷಿ ಸಚಿವ ಚೆಲುವರಾಯಸ್ವಾಮಿ


 ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2022-23 ರಿಂದ 2024-25ನೇ ಸಾಲಿನವರೆಗೆ ಒಟ್ಟು 13,728 ರೈತರು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೊಂದಾಯಿಸಿಕೊಂಡಿದ್ದಾರೆ. ಈ ಪೈಕಿ 945 ರೈತರಿಗೆ ವಿವಿಧ ಕಾರಣಗಳಿಂದ ಬೆಳೆ ವಿಮೆ ಪರಿಹಾರ ಜಮೆಯಾಗಿರುವುದಿಲ್ಲ.

ಸಮಸ್ಯೆಗಳನ್ನು ಪರಿಹರಿಸಿ ಸರ್ಕಾರ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಬುಧವಾರ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಬೆಳೆವಿಮೆ ಪರಿಹಾರ ಬಾಕಿ ಇರುವ 945 ರೈತರ ಪೈಕಿ ಎನ್.ಪಿ.ಸಿ.ಐ ಸೀಡಿಂಗ್, ಆಧಾರ್ ಕಾರ್ಡ್ ನಿಷ್ಕ್ರೀಯತೆ, ಅಮಾನ್ಯವಾದ ಬ್ಯಾಂಕ್ ಖಾತೆ ಸೇರಿದಂತೆ ತಾಂತ್ರಿಕ ಕಾರಣಗಳಿಂದಾಗಿ ಒಟ್ಟು 133 ರೈತರಿಗೆ ರೂ.40.09 ಲಕ್ಷ ಪರಿಹಾರ ಹಣ ಜಮೆಯಾಗದೆ ಹಿಂದಿರುಗಿದೆ.

ಬೆಳೆ ಕಟಾವು ಇಳುವರಿ ಪ್ರಯೋಗ ವ್ಯತ್ಯಾಸದ ಹಿನ್ನಲೆಯಲ್ಲಿ 798 ಬೆಳೆ ಹೊಂದಾಣಿಕೆಯಾಗದೇ ಹಾಗೂ ಮಾರ್ಗಸೂಚಿಯನುಸಾರ ಬೆಳೆ ಕಟಾವು ಪ್ರಯೋಗಗಳ ಇಳುವರಿ ಲಭ್ಯವಿಲ್ಲದ ಕಾರಣ 14 ರೈತರಿಗೆ ಪರಿಹಾರ ಪಾವತಿ ಬಾಕಿಯಿದೆ. 2025-26ರ ಮುಂಗಾರು ಹಂಗಾಮಿನಲ್ಲಿ ಮಿಮೆ ಮಾಡಿಸುವ ರೈತರ ಸಂಖ್ಯೆ ಹೆಚ್ಚಾಗಿದ್ದು, ಕಲಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 10,054 ರೈತರು ನೋಂದಾಯಿಸಿಕೊಂಡಿದ್ದಾರೆ. ಮಧ್ಯಂತರ ಬೆಳೆ ವಿಮೆ ನಷ್ಟ ಪರಿಹಾರದಡಿ ಒಟ್ಟು 9861 ರೈತರಿಗೆ ರೂ.906.32 ಲಕ್ಷಗಳ ಬೆಳೆ ವಿಮೆ ಪರಿಹಾರ ಲೆಕ್ಕಾಚಾರ ಮಾಡಲಾಗಿದ್ದು, ವಿಮಾ ಸಂಸ್ಥೆಯವರಿಂದ ಪರಿಹಾರ ಇತ್ಯರ್ಥ ಪ್ರಕ್ರಿಯೆಯಲ್ಲಿದೆ.

ಕಲಬುರಗಿ ಜಿಲ್ಲೆಗೆ ಮಧ್ಯಂತರ ಬೆಳೆ ವಿಮೆ ನಷ್ಟ ಪರಿಹಾರದಡಿ ರೂ.990 ಕೋಟಿ ಪರಿಹಾರವನ್ನು ನೀಡಲಾಗಿದೆ. ರಾಜ್ಯದ ಎಲ್ಲಾ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ರೈತರಿಗೆ ಬೆಳೆಮಿಮೆ ನೊಂದಣಿಗೆ ಪ್ರೋತ್ಸಾಹಿಸಬೇಕು. ಇದರಿಂದ ರೈತರಿಗೆ ಯಾವುದೇ ನಷ್ಟವಿಲ್ಲ. ವಿಮೆ ಮೊತ್ತ ಶೇ.2 ರಷ್ಟು ಮಾತ್ರ ರೈತರು ಪಾವತಿಸಬೇಕು. ಉಳಿದ ಬೆಳೆ ವಿಮೆ ಮೊತ್ತವನ್ನು ಸರ್ಕಾರ ಪಾವತಿಸುತ್ತದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರ ನೋಂದಣಿಯಿಂದ ಪ್ರಾರಂಭವಾಗಿ ಪರಿಹಾರ ವಿತರಣೆಯವರೆಗೆ ಸಂಪೂರ್ಣ ಪ್ರಕ್ರಿಯೆಯನ್ನು ಸಂರಕ್ಷಣೆ ಪೋರ್ಟಲ್ ಮೂಲಕವೇ ನಿರ್ವಹಿಸಲಾಗುತ್ತದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ವಿಶೇಷವಾಗಿ ಕಪ್ & ಕ್ಯಾಪ್ ಮಾದರಿಯಲ್ಲಿ ವಿಮೆ ಪರಿಹಾರವನ್ನು ನಿರ್ಧರಿಸಲು ಕ್ತಮ ಕೈಕೊಂಡಿರುವುದರಿಂದ ವಿಮೆ ಪರಿಹಾರ ವಿತರಣೆಯಲ್ಲಿ ಸುಧಾರಣೆಯನ್ನು ತರಲಾಗಿದೆ. ಈ ಕುರಿತು ವಿಮಾ ಕಂಪನಿ ಅಧಿಕಾರಿಗಳೊಂದಿಗೆ ಹಲವು ಬಾರಿ ಸಭೆ ನಡೆಸಿರುವುದಲ್ಲದೇ, ಕ್ರಾಪ್ ಕಟಿಂಗ್ ಎಕ್ಸಪರಿಮೇಟ್ ಸರಿಯಾಗಿ ಹಾಗೂ ವೈಜ್ಞಾನಿಕವಾಗಿ ನಡೆಸಬೇಕೆಂದು ಸೂಚನೆ ನೀಡಲಾಗಿದ್ದರ ಪರಿಣಾಮ ರಾಜ್ಯದಲ್ಲಿ ಬೆಳೆ ವಿಮೆ ಯೋಜನೆಯನ್ನು ಅತ್ಯಂತ ಯಶ್ವಸಿಯಾಗಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು..

ಈ ಮೂರು ವರ್ಷಗಳಲ್ಲಿ ಎಲ್ಲಾ ಹಂಗಾಮುಗಳಲ್ಲಿ ರಾಜ್ಯದಲ್ಲಿ ಒಟ್ಟು 73 ಲಕ್ಷ ರೈತರು ವಿಮೆ ಹಣ ಪಾವತಿಸಿ ನೊಂದಾಯಿಸಿಕೊಂಡವರ ಪೈಕಿ ಶೇ ಅಂದಾಜು 60% ರಷ್ಟು ರೈತರು, 43 ಲಕ್ಷ ನೊಂದಾಯಿಸಿಕೊಂಡ ರೈತರಿಗೆ ಒಟ್ಟು 5534 ಕೋಟಿ ರೂಪಾಯಿಗಳ ವಿಮೆ ಪರಹಾರವನ್ನು ನೀಡಿ ರೈತರ ಸಂಕಷ್ಟದ ಸಮಯದಲ್ಲಿ ನಮ್ಮ ಸರ್ಕಾರ ರೈತರಿಗೆ ವಿಮೆ ಪರಿಹಾರ ನೀಡುವಲ್ಲಿ ಇತಿಹಾಸ ನಿರ್ಮಿಸಿದೆ ಎಂದು ಚಲುವರಾಯಸ್ವಾಮಿಯವರು ತಿಳಿಸಿದರು..

ಇನ್ನೂ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ, ಕಲಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2022- 23 ನೇ ಸಾಲಿನಿಂದ 2025-26 ನೇ ಸಾಲಿನ ಮುಂಗಾರು ಹಂಗಾಮಿನವರೆಗೆ ಒಟ್ಟು 23782 ರೈತರು 31338.13 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆ ವಿಮೆಗೆ ನೊಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ 5 ಲಕ್ಷದ 5 ಸಾವಿರ ರೈತರಿಗೆ 990 ಕೋಟಿ ರೂಪಾಯಿ ಬೆಳೆ ವಿಮಾ ಪರಿಹಾರ ಹಣ ನೀಡಲಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು.

ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

 ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Thu, 11 Dec 2025 08:29:02 +0530 shivuagrico
ಬೆಳೆ ವಿಮೆ ಜಮೆ ಆರಂಭ; ಕಡಿಮೆ ಮೊತ್ತ ಜಮೆ ಆಗುತ್ತಿದೆ ಎಂದು ರೈತರ ಆರೋಪ https://krushirushi.in/Crop-insurance-payments-have-begun https://krushirushi.in/Crop-insurance-payments-have-begun ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಡಿ ಬೆಳೆ ವಿಮೆ ಪಾವತಿಸಿದ ರೈತರ ಖಾತೆಗೆ ಸೋಮವಾರದಿಂದ ಮೊತ್ತ ಜಮೆ ಆಗಲು ಆರಂಭಗೊಂಡಿದೆ. ಈ ನಡುವೆ ನಿರೀಕ್ಷೆಗಿಂತ ಕಡಿಮೆ ಮೊತ್ತ ಜಮೆ ಆಗುತ್ತಿರುವ ಬಗ್ಗೆ ರೈತರು ದೂರಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬೆಳೆ ವಿಮೆ ಪಾವತಿಯಾದ ಲೆಕ್ಕಚಾರದ ಬಗ್ಗೆಯೇ ವ್ಯಾಪಕ ಚರ್ಚೆ ಆರಂಭವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಅನ್ವಯವಾಗುವಂತೆ ಬೆಳೆ ವಿಮೆ ಪಾವತಿಸಬಹುದು. ಅಡಿಕೆ ಹೆಕ್ಟರ್‌ಗೆ 6400 ರೂ. ಹಾಗೂ ಕಾಳುಮೆಣಸು ಹೆಕ್ಟರ್‌ಗೆ 2350 ರೂ.ವಿಮಾ ಪ್ರಿಮಿಯಂ ಮೊತ್ತವನ್ನು ಸಹಕಾರಿ ಸಂಘ/ರಾಷ್ಟ್ರೀಯ ಬ್ಯಾಂಕ್‌ ಮೂಲಕ ಸರಕಾರಕ್ಕೆ ಪಾವತಿಸಬೇಕಿತ್ತು. ಬೆಳೆ ವಿಮೆ ಪಾವತಿಸಿದವರಿಗೆ ಹವಾಮಾನ ಆಧಾರಿತವಾಗಿ ವಿಮೆ ಮೊತ್ತ ಪ್ರತಿ ವರ್ಷ ಜಮೆಯಾಗುತ್ತದೆ.

ಕಡಿಮೆ ಜಮೆ: ಈ ವರ್ಷ ಎಂದಿಗಿಂತ ತಡವಾಗಿ ಬೆಳೆ ವಿಮೆ ಮೊತ್ತ ಜಮೆ ಆಗಿದ್ದು, ಅದರಲ್ಲೂ ಬೆಳೆ ವಿಮೆ ಮೊತ್ತ ನಿರೀಕ್ಷೆಗಿಂತ ಕಡಿಮೆ ಜಮೆ ಆಗುತ್ತಿದೆ ಎಂದು ತಾಲೂಕಿನ ಕೆಲವು ರೈತರು ದೂರಿಕೊಂಡಿದ್ದು, ತೋಟಗಾರಿಕಾ ಇಲಾಖೆಗಳ ಅಧಿಕಾರಿಗಳಲ್ಲೂ ಈ ಬಗ್ಗೆ ಪ್ರಶ್ನಿಸಿದ್ದಾರೆ. ಸುಳ್ಯ ತಾಲೂಕಿನಲ್ಲಿ ಹೆಚ್ಚಿನವರಿಗೆ ಕಾಳುಮೆಣಸು ಬೆಳೆಯ ಬೆಳೆ ವಿಮೆ ಮೊತ್ತ ಮಾತ್ರ ಜಮೆ ಆಗಿದ್ದು, ಅದೂ ಕೂಡ ವಿಮೆ ಮೊತ್ತ ಕಡಿಮೆ ಆಗಿದೆ ಎಂದು ತಿಳಿಸಿದ್ದಾರೆ.

ಅಡಿಕೆ ಮತ್ತು ಕಾಳುಮೆಣಸಿಗೆ ವಿಮೆ ಪಾವತಿಸಿದ್ದರೂ ಇದೀಗ ಎರಡೂ ಬೆಳೆಯ ಮೊತ್ತ ಜಮೆ ಆಗದೇ ಇರುವುದರಿಂದ ಮೊತ್ತ ಹೆಚ್ಚು-ಕಡಿಮೆ ಆಗಿರುವ ಬಗ್ಗೆ ಅಂದಾಜಿಸಲು ಆಗುತ್ತಿಲ್ಲ. ಶೇ.30ರಷ್ಟು ಕಡಿಮೆ ಜಮೆ ಆಗಿರುವ ಬಗ್ಗೆ ರೈತರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇನ್ನು ಈ ಬೆಳೆ ವಿಮೆ ಪಾವತಿ ಪ್ರಕ್ರಿಯೆ ಮುಂದುವರಿಯುತ್ತಿದ್ದು, ಕೆಲ ದಿನಗಳವರೆಗೆ ಮೊತ್ತ ಜಮೆ ಮುಂದುವರಿಯಲಿದೆ. ಸುಳ್ಯ ತಾಲೂಕಿನಲ್ಲಿ ಅಂದಾಜು 21 ಸಾವಿರ ರೈತರು ಬೆಳೆ ವಿಮೆ ಪಾವತಿಸಿದ್ದಾರೆ. ಸುಳ್ಯ ತಾಲೂಕಿನಿಂದಲೇ ಜಿಲ್ಲೆಯ ಅಧಿಕಾರಿಗಳಿಗೆ ಹೆಚ್ಚಿನ ದೂರುಗಳು ಸಲ್ಲಿಕೆಯಾಗಿವೆ ಎಂದು ತಿಳಿದುಬಂದಿದೆ. ಸೋಮವಾರ ದಿನವಿಡೀ ಆಯಾ ರೈತರು ತಮಗೆ ಜಮೆಯಾದ ಮೊತ್ತದಲ್ಲಿ ನಿರೀಕ್ಷಿತ ಮೊತ್ತ ಬಂದಿಲ್ಲ, ಕಡಿಮೆ ಬಂದಿದೆ, ಕೇವಲ ಒಂದು ಬೆಳೆಯ ಹಣ ಮಾತ್ರ ಜಮೆಯಾಗಿದೆ, ನಮ್ಮ ಭಾಗದಲ್ಲಿ ಹೆಚ್ಚಿನವರಿಗೆ ಇದೇ ರೀತಿ ಕಡಿಮೆ ಹಣ ಜಮೆಯಾಗಿದೆ ಎಂಬ ರೀತಿಯಲ್ಲಿ ಹೇಳಿದ್ದಾರೆ.

ಪೂರ್ಣ ವರದಿ ಬರಬೇಕಿದೆ: ಬೆಳೆ ವಿಮೆ ಮೊತ್ತ ಕಡಿಮೆ ಜಮೆ ಆಗಿರುವ ಬಗ್ಗೆ ತೋಟಗಾರಿಕಾ ಇಲಾಖೆ ಅಧಿಕಾರಿಗಳಲ್ಲಿ ಕೇಳಿದ ವೇಳೆ, ನಮಗೂ ರೈತರು ಸಂಪರ್ಕಿಸಿ, ಕಡಿಮೆ ಮೊತ್ತ ಜಮೆ ಆಗಿರುವ ಬಗ್ಗೆ ತಿಳಿಸಿದ್ದಾರೆ. ಇಂದಿನಿಂದ ಬೆಳೆ ವಿಮೆ ಮೊತ್ತ ಜಮೆ ಆರಂಭಗೊಂಡಿದೆ. ಇನ್ನು 3-4 ದಿನಗಳಲ್ಲಿ ತಾಲೂಕಿನಲ್ಲಿ ಎಷ್ಟುಮೊತ್ತ ಜಮೆ ಆಗಿದೆ ಎಂಬ ಬಗ್ಗೆ ನಮಗೆ ಮಾಹಿತಿ ಸಿಗುತ್ತದೆ. ಬಳಿಕವೇ ಮೊತ್ತ ಕಡಿಮೆ ಆಗಿದೆಯಾ ಇಲ್ಲವಾ ಎಂದು ಹೇಳಬಹುದು' ಎನ್ನುತ್ತಾರೆ ಅಧಿಕಾರಿಗಳು ತಿಳಿಸಿದ್ದಾರೆ.

]]>
Wed, 10 Dec 2025 12:28:56 +0530 shivuagrico
Bele parihara&14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಜಮಾ&ಕಂದಾಯ ಸಚಿವ ಕೃಷ್ಣಬೈರೆಗೌಡ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Bele-parihara-2321 https://krushirushi.in/Bele-parihara-2321 Bele parihara-14.21 ಲಕ್ಷ ರೈತರಿಗೆ 2249 ಕೋಟಿ ಬೆಳೆ ಪರಿಹಾರ ಜಮಾ-ಕಂದಾಯ ಸಚಿವ ಕೃಷ್ಣಬೈರೆಗೌಡ

 ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ಸದನಕ್ಕೆ ಈ ಮಾಹಿತಿ ನೀಡಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡು, ರಾಜ್ಯದಲ್ಲಿ 86.81 ಲಕ್ಷ ರೈತ ಕುಟುಂಬಗಳಿದ್ದು, 118.5 ಲಕ್ಷ ಹೆಕ್ಟೇರ್ ಮಳೆ ಆಶ್ರಿತ ಪ್ರದೇಶವಿದೆ. ಆದರೆ ರಾಜ್ಯದಲ್ಲಿ ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬುದಾಗಿ ಆರೋಪಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು, 2023 ರಲ್ಲಿ ಬರ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದಾಗ, ಕೇಂದ್ರ ಸರ್ಕಾರ ನೆರವಿಗೆ ಬರಲಿಲ್ಲ. ನಮ್ಮ ಸರ್ಕಾರ ಸುಪ್ರಿಂಕೋರ್ಟ್ ಮೊರೆಹೋಗಿ ಪರಿಹಾರ ಕೇಳುವ ಪ್ರಸಂಗ ಬರುವಂತಾಯಿತು.

ಪರಿಹಾರ ಅನುದಾನಕ್ಕಾಗಿ ಸುಪ್ರಿಂಕೊರ್ಟ್ ಮೊರೆಹೋಗಿ ಅನುದಾನ ಪಡೆದದ್ದು ದೇಶದ ಇತಿಹಾಸದಲ್ಲಿ ದಾಖಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಪರಿಹಾರವನ್ನು ನಮ್ಮ ಸರ್ಕಾರ ಕೊಟ್ಟಿದೆ. 38 ಲಕ್ಷ ರೈತರಿಗೆ ಸುಮಾರು 4300 ಕೋಟಿ ರೂ. ಪರಿಹಾರವನ್ನು ನಾವು ಕೊಟ್ಟಿದ್ದೇವೆ. ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ ಈಗಾಗಲೇ 2,249 ಕೋಟಿ ರೂ. ಪರಿಹಾರವನ್ನು ನೀಡಿದ್ದೇವೆ. ಸರ್ಕಾರದ ವೈಫಲ್ಯ ಇದ್ದರೆ ಟೀಕೆ ಮಾಡಲಿ, ಆದರೆ ಮಾಡಿದ ಕೆಲಸವನ್ನು ಮಾಡಿಯೇ ಇಲ್ಲ ಎಂದರೆ, ಅದನ್ನು ಕೇಳಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಮಾತನಾಡಿ, ಮುಖ್ಯಮಂತ್ರಿಗಳು ಈಗಾಗಲೇ ಕಂದಾಯ ಸಚಿವರೊಂದಿಗೆ ದೆಹಲಿಗೆ ತೆರಳಿ, ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ವರ್ಷ ರೈತರಿಗೆ ಪರಿಹಾರ ನೀಡಲು ಹಾಗೂ ಅತಿವೃಷ್ಟಿಯಿಂದ ಉಂಟಾದ ಆಸ್ತಿ ಪಾಸ್ತಿಗಳಿಗೆ ಪರಿಹಾರ ಮೊತ್ತ ಸೇರಿದಂತೆ ಕೇಂದ್ರ ಸರ್ಕಾರ ಇದುವರೆಗೂ ಯಾವುದೇ ಅನುದಾನ ಬಿಡುಗೆ ಮಾಡಿಲ್ಲ. ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿ ಅನುಭವಿಸಿದ ರೈತರಿಗೆ ವಿಪತ್ತು ಪರಿಹಾರದಲ್ಲಿನ ಮಾರ್ಗಸೂಚಿಗಿಂತಲೂ ಹೆಚ್ಚುವರಿಯಾಗಿ ಪರಿಹಾರ ಮೊತ್ತವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆ ಎಂದರು.

ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Wed, 10 Dec 2025 08:18:04 +0530 shivuagrico
ನಮ್ಮ ಹೊಲ ನಮ್ಮ ದಾರಿ' ಯೋಜನೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ https://krushirushi.in/Namma-Hola-Namma-Daari-Yojana https://krushirushi.in/Namma-Hola-Namma-Daari-Yojana 2022-23ನೇ ಸಾಲಿನ 'ನಮ್ಮ ಹೊಲ ನಮ್ಮ ದಾರಿ' ಯೋಜನೆಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ರಾಜ್ಯ ಸರ್ಕಾರದ ಯೋಜನೆಯಡಿ ಅನುಷ್ಠಾನಗೊಳಿಸುವ ಕುರಿತು ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ:ಆಇ/597/ವೆಚ್ಚ-6/2022 ದಿನಾಂಕ:20.08.2022

ಗ್ರಾಮೀಣ ಪ್ರದೇಶಗಳಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ನರೇಗಾ ಯೋಜನೆಯಡಿ ಈ ಹಿಂದೆ ಗ್ರಾಮೀಣ ಸರ್ವಋತು ಸಂಪರ್ಕ ರಸ್ತೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಸದರಿ ಯೋಜನೆಯಡಿ ರಸ್ತೆಗಳನ್ನು ಕೊನೆಯ ಆದ್ಯತೆಯಾಗಿ ಪರಿಗಣಿಸಿ ಶೇ10ರ ಮಿತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿತ್ತು.

ರಾಜ್ಯಾದ್ಯಂತ ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸಲು ವ್ಯಾಪಕವಾಗಿ ಕ್ರಮ ಕೈಗೊಳ್ಳಲು ಸಾಧವಾಗದ ಕಾರಣ, ಹಾಗೂ ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಸಕಾಲದಲ್ಲಿ ಮಾರುಕಟ್ಟೆಗೆ ಸಾಗಿಸಲು ಅನುಕೂಲವಾಗುವಂತೆ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು ಅತಗತವಾಗಿರವುದನ್ನು ಮನಗಂಡು ಸನ್ಮಾನ ಮುಖ್ಯಮಂತ್ರಿಗಳು 2022-23ನೇ ಆಯವ್ಯಯ ಭಾಷಣದಲ್ಲಿ ಓದಲಾದ 1 ಕಿ ಆಯವ್ಯಯದ ಕಂಡಿಕೆ ಸಂ:211 ರಲ್ಲಿ “2021-22ನೇ ಸಾಲಿಗೆ ಮಹಾತ್ಮ ಗಾಂಧಿ ಗ್ರಾಮೇಣ ಉದ್ಯೋಗ ಖಾತ್ರಿ ಯೋಜನೆಯಡಿ 13 ಕೋಟಿ ಮಾನವ ದಿನಗಳ ಉದ್ಯೋಗವನ್ನು ಸೃಜಿಸುವ ಗುರಿಗೆದುರಾಗಿ 14.05 ಕೋಟೆ ಮಾನವ ದಿನಗಳನ್ನು ಸೃಜಿಸಲಾಗಿದೆ. ಈ ಯೋಜನೆಯಡಿಯಲ್ಲಿ ರೈತರು ತಮ್ಮ ಹೊಲಕ್ಕೆ ಹೋಗುವ ರಸ್ತೆಗಳನ್ನು ಆದ್ಯತೆ ಮೇಲೆ ತೆಗೆದುಕೊಳ್ಳಲಾಗುವುದು” ಎಂದು ಘೋಷಣೆ ಮಾಡಿರುತ್ತಾರೆ.

ಆದ್ದರಿಂದ, 2022-23 ನೇ ಸಾಲಿನ ನರೇಗಾ ಯೋಜನೆಯ ಕಾರ್ಯಾಚರಣೆಯ ಮಾರ್ಗಸೂಚಿಗಳಂತೆ ರೈತರ ಹೊಲ/ಗೆದ್ದೆ/ತೋಟ/ಜಮೀನುಗಳಿಗೆ ರಸ್ತೆ ಸಂಪರ್ಕವನ್ನು ಕಲ್ಪಿಸುವ ಕಾಮಗಾರಿಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಿ, ಯೋಜನೆಯ ಒಟ್ಟು ಕಾರ್ಮಿಕ ಆಯವ್ಯಯದ ಶೇ 25 ರ ಮಿತಿಯಲ್ಲಿ ಅನುಷ್ಠಾನಗೊಳಿಸಲು ಓದಲಾದ-2 ರಲ್ಲಿ ಆದೇಶಿಸಲಾಗಿದೆ.

ಮೇಲಿನ ಹಿನ್ನೆಲೆಯಲ್ಲಿ, ರಾಜ್ಯದ 189 ಗ್ರಾಮೀಣ ವಿ.ಸ.ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರಕ್ಕೆ 30 ಕಿ.ಮೀ ನಂತೆ ರೈತರ ಹೊಲಗಳಿಗೆ ಹೋಗುವ ದಾರಿಗಳನ್ನು ನಿರ್ಮಾಣ ಮಾಡಲು “ನಮ್ಮ ಹೊಲ ನಮ್ಮ ದಾರಿ” ಎಂಬ ಯೋಜನೆಯನ್ನು ರೂಪಿಸಿ, ಸದರಿ ಯೋಜನೆಗೆ ರಾಜ್ಯ ಸರ್ಕಾರದ ಲೆಕ್ಕ ಶೀ. 3054 ರಡಿ ಮತ್ತು ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಒಗ್ಗೂಡಿಸುವಿಕೆಯೊಂದಿಗೆ ಅನುದಾನವನ್ನು ಬಳಸಿಕೊಂಡು ಅನುಷ್ಟಾನಗೊಳಿಸಲು ಸರ್ಕಾರವು ತೀರ್ಮಾನಿಸಿದೆ.

ಮುಂದುವರೆದು, ಓದಲಾದ 3ರಲ್ಲಿ ರಾಜ್ಯದ 189 ಗ್ರಾಮೀಣ ವಿ.ಸ.ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 30 ಕಿ.ಮೀ ನಂತೆ, ಪ್ರತಿ ಕಿ.ಮೀಗೆ 12.50 ಲಕ್ಷದಂತೆ ನಿಗಧಿಪಡಿಸಿ, ಅದರಂತೆ, ಒಟ್ಟಾರೆ 5670.00 ಕಿಮೀ ರಸ್ತೆಯನ್ನು ಅಭಿವೃದ್ಧಿಪಡೆಸಲು ರೂ.708.75 ಕೋಟಿಗಳಲ್ಲಿ, MGNREGA ಯೋಜನೆಯಿಂದ ಪ್ರತಿ ಕಿ.ಮೀ ರಸ್ತೆಯನ್ನು ಅಭಿವೃದ್ಧಿಪಡಿಸಲು ರೂ.9.00 ಲಕ್ಷದಂತೆ ಒಟ್ಟು ರೂ.510.30 ಕೋಟಿ ಹಾಗೂ ರಾಜ್ಯ ಸರ್ಕಾರದಿಂದ ಲೆಕ್ಕ ಶೀ 3054 ರಸ್ತೆ ಪ್ರತಿ ಕಿ.ಮೀ ರಸ್ತೆಯನ್ನು ಅಭಿವೃದಿಪಡಿಸಲು ರೂ.3.50 ಲಕ್ಷದಂತೆ ಒಟ್ಟು 198.45 ಕೋಟಿಗಳನ್ನು ಭರಿಸಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ.

]]>
Tue, 09 Dec 2025 12:17:11 +0530 shivuagrico
Beleparihar status&ಆಧಾರ್ ನಂಬರ್,ಸರ್ವೆ ನಂಬರ್,ಎಫ್ ಐಡಿ,ಮೊಬೈಲ್ ನಂಬರ್ ಹಾಕಿ ಬೆಳೆ ಪರಿಹಾರ ಚೆಕ್ ಮಾಡಿ https://krushirushi.in/Beleparihara-status-2319 https://krushirushi.in/Beleparihara-status-2319 Beleparihar status-ಆಧಾರ್ ನಂಬರ್,ಸರ್ವೆ ನಂಬರ್,ಎಫ್ ಐಡಿ,ಮೊಬೈಲ್ ನಂಬರ್ ಹಾಕಿ ಬೆಳೆ ಪರಿಹಾರ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Aadhaar number/ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ Aadhaar number/ಆಧಾರ್ ಸಂಖ್ಯೆ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿ

 ಈ ಕೆಳಗಿನಂತೆ ನಿಮ್ಮ ಆಧಾರ್ ನಂಬರ್ ನ ಕೊನೆಯ 4 ಸಂಖ್ಯೆ ಒಂದೆೇ ಇರುವ ಎಲ್ಲಾ ರೈತರ ಪಟ್ಟಿ ಸಿಗಲಿದೆ.ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಲು Search ಬಾಕ್ಸನಲ್ಲಿ ನಿಮ್ಮ ಹೆಸರು ಹಾಕಿ Search ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಬೆಳೆಹಾನಿ ಪರಿಹಾರ ಜಮಾ ಮಾಹಿತಿ ಸಿಗಲಿದೆ.

FID based Belehani parihara-ನಿಮ್ಮ FID ನಂಬರ್ ಹಾಕಿ ನಿಮಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ

ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx 

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.

ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ

Mobile number based croploss compensation-ನಿಮ್ಮ ಮೊಬೈಲ್ ನಂಬರ್ ಹಾಕಿ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ


ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ

ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ

ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ

Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.

Survey number based croploss compensation-ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು  ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Survey number/ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ


ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,ಸರ್ವೆ ನಂಬರ್,ಸರ್ ನಾಕ್,ಹಿಸ್ಸಾ ನಂಬರ್ select ಮಾಡಿ Get data/ಪಡೆಯಿರಿ ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ.

]]>
Mon, 08 Dec 2025 22:23:51 +0530 shivuagrico
Poochanthe Parapancha& ತಮ್ಮ ಕನಸಿನ ತೋಟ ನಿರ್ಮಾಣಕ್ಕೆ 'ಪೂಚಂತೇ ಪರಪಂಚ'ದ ಸಸಿಗಳು ಮೊದಲ ಆದ್ಯತೆಯಾಗಲಿ. https://krushirushi.in/Poochanthe-Parapancha https://krushirushi.in/Poochanthe-Parapancha Poochanthe Parapancha- ತಮ್ಮ ಕನಸಿನ ತೋಟ ನಿರ್ಮಾಣಕ್ಕೆ 'ಪೂಚಂತೇ ಪರಪಂಚ'ದ ಸಸಿಗಳು ಮೊದಲ ಆದ್ಯತೆಯಾಗಲಿ.


*ಪೂಚಂತೇ ಪರಪಂಚ *
 *ಹೊಸ ವರುಷ, ತರಲಿ ಹಚ್ಚಸಿರ ಹರುಷ*

*ಆತ್ಮೀಯ ರೈತ ಬಾಂಧವರೇ...*
ಪ್ರತಿ ದಿನ ಹೊಸತನ, ನಿತ್ಯ ಜನನ ನಿತ್ಯ ಮರಣ. ಪ್ರಕೃತಿ ನಿತ್ಯನೂತನ ನವನವೀನ. ಮಾಗಿ ಚಳಿ 2025ರ ಕೊನೆ ಕ್ಷಣಗಳಿಗೂ 2026ರ ಹೊಸ ದಿನಗಳಿಗೂ ಸಾಕ್ಷಿಯಾಗಿ ಮೈಮನ ಆವರಿಸಿಕೊಂಡಿದೆ. ನೆನ್ನೆಯ ಅನುಭವ, ಇಂದಿನ ಕಲಿಕೆ, ನಾಳೆಯ ಭರವಸೆಯೊಂದಿಗೆ ತಮ್ಮ ಭೂಮಿಯಲ್ಲಿ ನಿತ್ಯೋತ್ಸವದ ಹಕ್ಕಿಪಕ್ಕಿ ಕಲರವದ ಕೂಗು ಸದಾ ಗುನುಗುತ್ತಿರುವಂತ ನಿತ್ಯ ಹರಿದ್ವರ್ಣದ ಚಂದದ ತೋಟ ರೂಪಿಸಲು ಹರಿವ ಹೊಳೆ ನೀರಿನ ಹುಮ್ಮಸಿನಂತೆ ಹೊಸ ವರುಷದಲ್ಲಿ ಯೋಚಿಸಿ ಯೋಜಿಸಿ, ಬದುಕು-ಬೇಸಾಯ ಹಸಿರಾಗಿಸಿ ನಗಿಸಿ. 

ನಿಮಗೆಲ್ಲರಿಗೂ ತಿಳಿದಿರುವಂತೆ *ಪೂಚಂತೇ ಪರಪಂಚ'* ದಲ್ಲಿ ನೈಸರ್ಗಿಕ ಕೃಷಿ ವಿಧಾನದಲ್ಲಿ ತಮಗೆ ಬೇಕಾದ ಸಸಿಗಳ ಉತ್ಪಾದನೆ, ನಿರ್ವಹಣೆ, ಆರೈಕೆ ಮಾಡುತ್ತಾ, ಪೂರೈಸುತ್ತಾ ಬಂದಿದ್ದೇವೆ. 2026 ರ ಹೊಸ ವರುಷದಲ್ಲಿ ನಿಮ್ಮ ಕನಸಿನ ತೋಟ ಕಟ್ಟಲು ನಮ್ಮಲ್ಲಿ ಏನೆಲ್ಲಾ ಗಿಡಗಳು ಲಭ್ಯ ನೋಡಿ. ಬಿಡುವು ಮಾಡಿಕೊಂಡು  ಭೇಟಿ ನೀಡಿ. 

*ಪೂಚಂತೇ ಪರಪಂಚ*
ವಿಸ್ಮಯಗಳ ಅಕ್ಷಯ ಪಾತ್ರೆ!
ಬೆಳವಾಡಿ 
ಅರಕಲಗೂಡು ತಾಲ್ಲೂಕು 
ಹಾಸನ 573113
9591066583

೧. *ವರ್ಷಪೂರ್ತಿ ಫಸಲು ಕೊಡುವ, ವರ್ಷ ಪೂರ್ತಿ ಮಾರಾಟವಾಗುವ ಜಗದ್ವಿಖ್ಯಾತ ಬಿಜಾಪುರದ ಕಾಗ್ಜಿ ನಿಂಬೆ ಗಿಡಗಳು* 

೨. ಅತ್ಯುತ್ತಮ ಬಿತ್ತನೆ ಗೋಟುಗಳ ಆಯ್ಕೆ ಮಾಡಿ ಬೆಳೆಸಿರುವ ನಾಟಿ ಅಡಿಕೆ ಸಸಿಗಳು

೩. ಚನ್ನರಾಯಪಟ್ಟಣ ತಾಲ್ಲೂಕಿನ ನೈಸರ್ಗಿಕ ಕೃಷಿಕರ ತೋಟದಲ್ಲಿ ಅತ್ಯುತ್ತಮ ತೆಂಗಿನ ಮರಗಳ ಗುರುತು ಮಾಡಿಕೊಂಡು ಆಯ್ಕೆ ಮಾಡಿ ತಂದಂತಹ ಬಿತ್ತನೆ ತೊಳ್ಳುಗಳಿಂದ ಬೆಳೆಸಿರುವ ತಿಪಟೂರು ಟಾಲ್ ತೆಂಗಿನ ಗಿಡಗಳು

೪.  ನಮ್ಮ ಕರ್ನಾಟಕದ ಪ್ರತಿಷ್ಠಿತ, ಒಕ್ಕೂಟ ಭಾರತ ಸರ್ಕಾರದಿಂದ ಪ್ರಮಾಣೀಕೃತಗೊಂಡಿರುವ ಬೆಂಗಳೂರಿನ *Green Leaf* ಸಂಸ್ಥೆಯ ಅಂಗಾಂಶ ಕೃಷಿ ಏಲಕ್ಕಿ ಬಾಳೆ ಮತ್ತು ವಿಲಿಯಮ್ಸ್ ಪಚ್ಚ ಬಾಳೆ ಸಸಿಗಳು 


೫. ಹಿರಳಿಕಾಯಿ 
೬. ಕೊಡಗು ಕಿತ್ತಳೆ 
೭. ಚಂದ್ರಗಿರಿ (ಅರೇಬಿಕಾ)ಕಾಫಿ 
೮. C*R (ರೊಬೋಸ್ಟಾ) ಕಾಫಿ ಸಸಿಗಳು 

೯. *ಜಾಯಿಕಾಯಿ*
೧೦. *ದಾಲ್ಚಿನ್ನಿ* 
೧೧. ಲವಂಗ
೧೨. ಸರ್ವ ಸಾಂಬಾರು 
೧೩. ಅಂಗಾಂಶ ಕೃಷಿ ಏಲಕ್ಕಿ ಸಸಿಗಳು 

೧೪.  ರಸಬಕ್ಕೆ 
೧೫. ಮಲ್ಲಪಾಳಂ ಹಲಸು 
೧೬. ಗೋಡಂಬಿ ಹಲಸು 
೧೭. ತಾಲಿಪಾರಂ ಹಲಸು 
೧೮. ಗಮ್ ಲೆಸ್ ಹಲಸು 
೧೯. ಆಲ್ ಟೈಂ ಹಲಸು ಗಿಡಗಳು 


೨೦. ಮಲ್ಲಿಕಾ ಮಾವು
೨೧. ರಸಪುರಿ ಮಾವು 
೨೨. ತೋತಾಪುರಿ (ಗಿಣಿ) ಮಾವು 
೨೩. ಜೀರಿಗೆ ಮಿಡಿ ಮಾವು 
೨೪. ಅಲ್ಫಾನ್ಸೋ ಮಾವು
೨೫. ಕೇಸರ್ ಮಾವು ಗಿಡಗಳು 


೨೬. ಜಂಭೂ ನೇರಳೆ (ಕಲ್ಕತ್ತಾ) 
೨೭. ಬಿಳಿ ನೇರಳೆ 
೨೮. ವೆಲ್ವೆಟ್ ಆಪಲ್ 
೨೯. ವಾಟರ್ ಆಪಲ್ ಗ್ರೀನ್ 
೩೦. ವಾಟರ್ ಆಪಲ್ ರೆಡ್ ಸಸಿಗಳು 

೩೧. ಅಗಸೆ ಗಿಡ 
೩೨. NMK GOLD ಸೀತಾಫಲ 
೩೩. ರಾಮಫಲ 
೩೪. ಲಕ್ಷ್ಮಣ ಫಲ ಗಿಡಗಳು 


೩೫. PKM1 ಹುಣಸೇ 
೩೬. ಬೆಟ್ಟದ ನೆಲ್ಲಿಕಾಯಿ 
೩೭. ಕಿರು ನೆಲ್ಲಿಕಾಯಿ 
೩೮. ಎಗ್ ಫ್ರೂಟ್
೩೯. ಬೇಲದ ಹಣ್ಣು 
೪೦. ಬಟರ್ ಫ್ರೂಟ್ ಸಸಿಗಳು 

೪೧. ಗೋಡಂಬಿ
೪೨. ಸಿಹಿ ಹುಣಸೇ 
೪೩. ಬಿಳಿ ಸಪೋಟ
೪೪. ಅಂಜೂರ
೪೫. ಕ್ರಿಕೆಟ್ ಬಾಲ್ ಸಪೋಟ ಗಿಡಗಳು 


೪೬. ಬಾರ್ಬಡೋಸ್ ಚೆರ್ರಿ
೪೭. ಅಲಹಾಬಾದ್ ಸಫೇದಾ ಸೀಬೆ 
೪೮. ಲಕ್ನೋ 49 ಸೀಬೆ 
೪೯. ಥೈವಾನ್ ಪಿಂಕ್ ಸೀಬೆ 
೫೦. ದಾಂಡೇಲಿ ತೇಗದ ಸಸಿಗಳು 

೫೧. ಜೇನು ಕೃಷಿಗೆ ಪೂರಕ ಅಂಟುವಾಳ 
೫೨. ಕಾಡು ಬಾದಾಮಿ 
೫೩.  ಅರಳಿ 
೫೪. ಬೇವು 
೫೫. ಹೊನ್ನೆ 
೫೬. ಬಿದಿರು 
೫೭. ಮುತ್ತುಗ

ಮತ್ತೂ ಇತ್ಯಾದಿ ಗಿಡಗಳು ಲಭ್ಯ.

ವೈವಿಧ್ಯ ಗಿಡಮರಗಳ ಹಚ್ಚಸಿರಿನಿಂದ ಕಂಗೊಳಿಸುವ ತೋಟಗಳು ರೈತರ ಪಾಲಿಗೆ ಸಾಕ್ಷಾತ್ ಸ್ವರ್ಗ, ಆಹಾರ-ಆರೋಗ್ಯಧಾಮ,  ನೆಮ್ಮದಿ ತಾಣ, ಬದುಕು ಬೇಸಾಯಕ್ಕೆ ಬೆನ್ನೆಲುಬಾಗೋ ಎಟಿಎಂ. *ಕೃಷಿಯೂ ಖುಷಿಯ ಚಿಲುಮೆಯಾಗಲು ಲಾಭದಾಯಕ ತೋಟವಂತೂ ಇರಲೇಬೇಕು.* ನಿಮ್ಮ ಕನಸಿನ ತೋಟದ ನಿರ್ಮಾಣಕ್ಕೆ ಬೇಕಾದ ಬಿಸಿಲಿನಲ್ಲಿ ನೈಸರ್ಗಿಕ ಕೃಷಿಯಲ್ಲಿ ಬೆಳೆಸಿರುವ ಗಿಡಗಳಿಗಾಗಿ *'ಪೂಚಂತೇ ಪರಪಂಚ* ನಿಮ್ಮ ಮೊದಲ ಆದ್ಯತೆಯಾಗಿರಲಿ, ಶುಭವಾಗಲಿ.

]]>
Mon, 08 Dec 2025 12:45:40 +0530 shivuagrico
ಬೆಳೆಹಾನಿ: ರೈತರಿಗೆ ತಲುಪದ ಪೂರ್ಣ ಪರಿಹಾರ https://krushirushi.in/Belahani-parihara-2025 https://krushirushi.in/Belahani-parihara-2025 ಅತಿವೃಷ್ಟಿ ಮತ್ತು ನೆರೆಯಿಂದ ಮುಂಗಾರು ಹಂಗಾಮಿನಲ್ಲಿ ಬೆಳೆಹಾನಿ ಅನುಭವಿಸಿದ ರೈತರಿಗೆ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಮಾರ್ಗಸೂಚಿ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಘೋಷಣೆ ಮಾಡಿದಂತೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ಸಿಕ್ಕಿಲ್ಲ.

ಸಂಪೂರ್ಣ ಬೆಳೆಹಾನಿ ಸಂಭವಿಸಿದ್ದರೂ ಕಡಿಮೆ ಪ‍್ರಮಾಣದಲ್ಲಿ ಹಾನಿ ತೋರಿಸಿ ಪರಿಹಾರ ಮೊತ್ತದಲ್ಲಿ ಕಡಿತ ಮಾಡಲಾಗಿದೆ ಎಂದು ಹಲವು ರೈತರು ದೂರುತ್ತಿದ್ದಾರೆ

.ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಸೆ.30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಿದ್ದರು. ಮಳೆಯಾಶ್ರಿತ ಪ್ರತಿ ಹೆಕ್ಟೇರ್‌ಗೆ ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ₹8,500 ಜೊತೆಗೆ ರಾಜ್ಯ ಸರ್ಕಾರದಿಂದ ಪ್ರತ್ಯೇಕವಾಗಿ ಹೆಚ್ಚುವರಿಯಾಗಿ ₹8,500 ಸೇರಿ ₹17,000, ನೀರಾವರಿ ಬೆಳೆಗಳಿಗೆ ₹17,000 + ₹8,500 ಸೇರಿ ₹25,500 ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ₹22,500 + ₹8,500 ಸೇರಿ ₹31,000 ಪರಿಹಾರ ನೀಡ ಲಾಗುವುದು ಎಂದು ಮುಖ್ಯಮಂತ್ರಿ ಕಲಬುರಗಿಯಲ್ಲಿ ಘೋಷಿಸಿದ್ದರು.

ರಾಜ್ಯದಲ್ಲಿ 12.11 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಗಳಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಯಾಗಿದೆ.

ಎಸ್‌ಡಿಆರ್‌ಎಫ್‌/ ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ₹1,218.03 ಕೋಟಿ ಪರಿಹಾರದ ಜೊತೆಗೆ ರಾಜ್ಯ ಸರ್ಕಾರದಿಂದ ₹1,033.60 ಕೋಟಿ ಬೆಳೆ ಪರಿಹಾರ ವಿತರಿಸಲು ಈಚೆಗೆ ಚಾಲನೆ ನೀಡಲಾಗಿತ್ತು.

ಬ್ಯಾಂಕ್‌ ಖಾತೆಗಳ ಸಮಸ್ಯೆಯಿಂದ ಕೆಲ ರೈತರಿಗೆ ಇನ್ನೂ ಪರಿಹಾರ ಬಂದಿಲ್ಲ ಎಂದು ಕೃಷಿ ಇಲಾಖೆ ಅಧಿಕಾರಿಗಳು ಹೇಳುತ್ತಾರೆ. ಆದರೆ, ಈಗ ಪಾವತಿ ಆಗಿರುವ ಪ್ರಕರಣಗಳಲ್ಲೂ ರೈತರ ಖಾತೆಗಳಿಗೆ ಸರ್ಕಾರ ಘೋಷಿಸಿದಂತೆ ಪೂರ್ಣಪ್ರಮಾಣದಲ್ಲಿ ಪರಿಹಾರ ಜಮೆ ಆಗಿಲ್ಲ ಎಂಬುದು ರೈತ ಮುಖಂಡರ ಆರೋಪ.

ಎನ್‌ಡಿಆರ್‌ಎಫ್‌/ಎಸ್‌ಡಿಆರ್‌ಎಫ್‌ ಪರಿಹಾರ ಮತ್ತು ರಾಜ್ಯ ಸರ್ಕಾರದ ವಿಶೇಷ ಪ್ಯಾಕೇಜ್‌ ಪರಿಹಾರದ ಹಣ ಪ್ರತ್ಯೇಕ ಕಂತಿನಲ್ಲಿ ರೈತರ ಖಾತೆಗಳಿಗೆ ಜಮಾ ಆಗಿದೆ. ಹೆಚ್ಚಿನ ರೈತರ ಖಾತೆಗಳಿಗೆ ಹೆಕ್ಟೇರ್‌ಗೆ ಎರಡೂ ಕಂತು ಸೇರಿ ₹6,800, ₹10,200, ₹13,600 ಪರಿಹಾರ ಜಮೆ ಆಗಿದೆ ಎಂದು ರೈತರು ದೂರಿದ್ದಾರೆ.

ರೈತರು ಪರಿಹಾರಕ್ಕಾಗಿ ಪಹಣಿ ಮತ್ತು ಬ್ಯಾಂಕ್‌ ಪಾಸ್‌ಬುಕ್‌ ಪ್ರತಿ ಹಿಡಿದು ಕೃಷಿ ಇಲಾಖೆ ಕಚೇರಿಗಳಿಗೆ ಎಡತಾಕುತ್ತಿದ್ದಾರೆ. 'ಎರಡು ಎಕರೆ ಮೆಕ್ಕೆಜೋಳ ಬೆಳೆ ಹಾನಿಯಾಗಿದೆ. ಪರಿಹಾರಕ್ಕಾಗಿ ಹಾದಿ ಕಾಯುತ್ತಿದ್ದೇವೆ' ಎಂದು ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕಿನ ಕೂಬಿಹಾಳದ ಪರಮೇಶ ಹುಬ್ಬಳ್ಳಿ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು. 'ನಮ್ಮದು 4 ಎಕರೆ 22 ಗುಂಟೆ ಜಮೀನು ಇದೆ. ಇನ್ನೂ ಪರಿಹಾರ ಬಂದಿಲ್ಲ' ಎಂದು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಕಲಗುರ್ತಿಯ ಲಕ್ಕಪ್ಪ ಅಲವತ್ತುಕೊಂಡರು.

'ಬೆಳೆಹಾನಿ ಕುರಿತು ಜಂಟಿ ಸಮೀಕ್ಷೆ ನಡೆಸಿದ್ದು, ಬೆಳೆಹಾನಿ ಆಗಿರುವಷ್ಟಕ್ಕೆ ಮಾರ್ಗಸೂಚಿ ಅನ್ವಯ ಪರಿಹಾರ ಮೊತ್ತ ವಿತರಿಸಲಾಗುತ್ತಿದೆ' ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕ ಸಮದ್‌ ಪಟೇಲ್‌, ಯಾದಗಿರಿ ಜಂಟಿ ಕೃಷಿ ನಿರ್ದೇಶಕ ರತೇಂದ್ರನಾಥ ಸೂಗೂರ 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.

'ರೈತರಿಗೆ ಮಾಡಿದ ಮೋಸ'

'ಮುಖ್ಯಮಂತ್ರಿ ಅವರೇ ಶೇ 80ರಷ್ಟು ಬೆಳೆಹಾನಿ ಆಗಿದೆ ಎಂದಿದ್ದರು. ಆದರೆ, ಕೃಷಿ ಅಧಿಕಾರಿಗಳು ವಾಸ್ತವ ಅರಿಯದೇ ಒಂದು, ಒಂದೂವರೆ ಎಕರೆ ಬೆಳೆಹಾನಿ ತೋರಿಸಿದ್ದಾರೆ. ಇದರಿಂದ ಯಾವ ರೈತರಿಗೂ ಪೂರ್ಣ ಪರಿಹಾರ ಸಿಕ್ಕಿಲ್ಲ. ಇದು ರೈತರಿಗೆ ಮಾಡಿದ ಮೋಸ' ಎಂದು ರೈತ ಹೋರಾಟ ಸಮಿತಿ ಮುಖಂಡ ಅವ್ವಣ್ಣ ಮ್ಯಾಕೇರಿ ಆರೋಪಿಸುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಅಳಲು

ಮುಖ್ಯಮಂತ್ರಿ ಮತ್ತು ಕೃಷಿ ಇಲಾಖೆಯ 'ಜೆಡಿಎಕಲಬುರಗಿ' ಫೇಸ್‌ಬುಕ್‌ ಪೇಜ್‌ ಮೂಲಕವು ಹಲವು ರೈತರು ಪರಿಹಾರ ಕುರಿತು ಅಳಲು ತೋಡಿಕೊಳ್ಳುತ್ತಿದ್ದಾರೆ.

ಸಂತೋಷ ಕನ್ನೊಳ್ಳಿ ಅವರು, 'ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನಲ್ಲಿ ಹೆಕ್ಟೇರ್‌ ನೀರಾವರಿ ಬೆಳೆಗೆ ಕೇವಲ ₹11,900 ಜಮಾ ಆಗಿದೆ' ಎಂದು ದೂರಿದ್ದಾರೆ. ಪವನ ನಿಂಬಾಳ ಅವರು, 'ಹೇಳಿದ್ದು ₹8,500. ಬಂದಿದ್ದು ₹5,500, ₹6,800 ಏಕೆ' ಎಂದು ಪ್ರಶ್ನಿಸಿದ್ದಾರೆ.

'ಯಾವ ಲೆಕ್ಕದಲ್ಲಿ ₹3,500 ಪರಿಹಾರ ಹಾಕಿದ್ದೀರಿ' ಎಂದು ಮಂಜು ರೊಟ್ಟಿ ಪ್ರಶ್ನಿಸಿದ್ದಾರೆ.

]]>
Mon, 08 Dec 2025 12:38:39 +0530 shivuagrico
FID survey number link&ಎಫ್ ಐಡಿಗೆ ಲಿಂಕ್ ಆದ ಸರ್ವೆ ನಂಬರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ, ನಿಮ್ಮ FID ಗೆ ಎಷ್ಟು ಸರ್ವೆ ನಂಬರ್ ಲಿಂಕ್ ಆಗಿದೆ ಚೆಕ್ ಮಾಡಿ https://krushirushi.in/FID-survey-number-link-2316 https://krushirushi.in/FID-survey-number-link-2316 FID survey number link-ಎಫ್ ಐಡಿಗೆ ಲಿಂಕ್ ಆದ ಸರ್ವೆ ನಂಬರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ

ಫ್ರುಟ್ಸ್ ನಲ್ಲಿ(FRUITS) ನೊಂದಣಿ ಮಾಡಿಕೊಳ್ಳದೇ ಇರುವ ರೈತರು ಕೂಡಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಂಡವರು ಎಲ್ಲಾ ಸರ್ವೆ ನಂಬರ್(Survey number) ಗಳನ್ನು ನಿಮ್ಮ FIDಗೆ ಲಿಂಕ್ ಮಾಡಬೇಕು, ಅಂದರೆ ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 01 ಎಕರೆ ಮಾತ್ರ ನಮೂದಿಸಿರುತ್ತಾರೆ, ಅಂತಹವರಿಗೆ ಕೇವಲ 01 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ, ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ಪಹಣಿಯ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ (FRUITS) ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ(bele parihara) ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ ಪಾವತಿಯಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ (FRUITS)ನಲ್ಲಿ ನೊಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ನಿಮ್ಮ FID ಗೆ ಎಷ್ಟು ಸರ್ವೆ ನಂಬರ್ ಲಿಂಕ್ ಆಗಿದೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್(Aadhaar number) ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ password create ಮಾಡಿ

Mobile number,Create ಮಾಡಿದ password ಹಾಗೂ captcha code ಹಾಕಿ ಲಾಗಿನ್ ಮಾಡಿ

ನಂತರ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, Search ಮೇಲೆ ಕ್ಲಿಕ್ ಮಾಡಿ

ನಂತರ Registration status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ FIDಗೆ ಯಾವ ಯಾವ ಸರ್ವೆ ನಂಬರ್(Survey number) ಗಳನ್ನು ಸೇರಿಸಲಾಗಿದೆ ಎಂದು ತೋರಿಸುತ್ತದೆ

]]>
Mon, 08 Dec 2025 08:42:24 +0530 shivuagrico
Mobile number based croploss compensation&ನಿಮ್ಮ ಮೊಬೈಲ್ ನಂಬರ್ ಹಾಕಿ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಿ https://krushirushi.in/Mobile-number-based-croploss-compensation-2315 https://krushirushi.in/Mobile-number-based-croploss-compensation-2315 Mobile number based croploss compensation-ನಿಮ್ಮ ಮೊಬೈಲ್ ನಂಬರ್ ಹಾಕಿ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ


ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ

ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ

ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ

Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.

Survey number based croploss compensation-ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು  ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Survey number/ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ


ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,ಸರ್ವೆ ನಂಬರ್,ಸರ್ ನಾಕ್,ಹಿಸ್ಸಾ ನಂಬರ್ select ಮಾಡಿ Get data/ಪಡೆಯಿರಿ ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ.

]]>
Sun, 07 Dec 2025 09:29:09 +0530 shivuagrico
ರಾಜ್ಯದ ರೈತರಿಗೆ ಗುಡ್ ನ್ಯೂಸ್ : 10 HP ವರೆಗಿನ ಕೃಷಿ ಪಂಪ್ ಸೆಟ್' ಗಳಿಗೆ ಸಿಗಲಿದೆ ಸಬ್ಸಿಡಿ.! https://krushirushi.in/Pumpset-subsidies-Karnataka-2025 https://krushirushi.in/Pumpset-subsidies-Karnataka-2025 ರೈತರು ಕಡ್ಡಾಯವಾಗಿ ಆಧಾರ ಸಂಖ್ಯೆ ಜೋಡಿಸಿದ್ದಲ್ಲಿ ಮಾತ್ರ 10 ಹೆಚ್ಪಿ ವರೆಗಿನ ಕೃಷಿ ಪಂಪ್ಸೆಟ್ಗಳಿಗೆ ಮಾತ್ರ ಸಬ್ಸಿಡಿ ಲಭ್ಯವಿರುತ್ತದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಜಾಲದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆಯುವುದು ಅಥವಾ ವಿದ್ಯುತ್ ಕಳ್ಳತನ ಮಾಡುವುದು ಕಾನೂನುಬಾಹಿರ ಹಾಗೂ ಅದರಿಂದ ವಿದ್ಯುತ್ ಅವಘಡಗಳು ಸಂಭವಿಸಬಹುದು.ವಿದ್ಯುತ್ ಕಳ್ಳತನ ಪ್ರಯತ್ನದ ನಡುವೆ ವಿದ್ಯುತ್ ಅಪಘಾತ ಸಂಭವಿಸಿ ಪ್ರಾಣಹಾನಿಯಾಗುತ್ತಿವೆ

.ನಿಮ್ಮ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಅವಶ್ಯಕತೆಯಿದ್ದಲ್ಲಿ, ಹೆಸ್ಕಾಂ ಕಾರ್ಯ ಮತ್ತು ಪಾಲನೆ ಉಪವಿಭಾಗ ಕಚೇರಿಗೆ ಭೇಟಿ ನೀಡಿ ಅಧೀಕೃತವಾಗಿ ಹೊಸ ಸಂಪರ್ಕ ಪಡೆಯಿರಿ ಎಂದು ತಿಳಿಸಲಾಗಿದ್ದು, ವಿದ್ಯುತ್ ಜಾಲಕ್ಕೆ ಅಕ್ರಮ ಕೃಷಿ ಪಂಪ್ಸೆಟ್ಗಳು ಜೋಡಣೆಗೊಂಡಲ್ಲಿ ವಿದ್ಯುಚ್ಛಕ್ತಿ ಕಾಯ್ದೆ 2003ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು.

ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಜಾಲದ ಹೊರತಾಗಿ ಕುಸುಮ್ ಬಿ ಯೋಜನೆಯಡಿ ಸೋಲಾರ್ ವಿದ್ಯುತ್ ಬಳಸಿ. ಈ ಯೋಜನೆಯಡಿ ರಾಜ್ಯ ಸರ್ಕಾರದಿಂದ ಶೇ.50, ಕೇಂದ್ರ ಸರ್ಕಾರದಿಂದ ಶೇ.30 ಸಬ್ಸಿಡಿ ಲಭ್ಯ.ಕೇವಲ ಶೇ.20 ರಷ್ಟು ಹಣ ಮಾತ್ರ ರೈತರು ಭರಿಸಬೇಕು.

]]>
Sat, 06 Dec 2025 13:08:29 +0530 shivuagrico
FID based bele parihara&FID ಇದ್ದವರಿಗೆ ಮಾತ್ರ ಬೆಳೆ ಪರಿಹಾರ,ನಿಮ್ಮ FID ನಂಬರ್ ಹಾಕಿ ಬೆಳೆಹಾನಿ ಪರಿಹಾರ ಚೆಕ್ ಮಾಡಿ https://krushirushi.in/FID-based-bele-parihara-2313 https://krushirushi.in/FID-based-bele-parihara-2313 FID based bele parihara-FID ಇದ್ದವರಿಗೆ ಮಾತ್ರ ಬೆಳೆ ಪರಿಹಾರ,ನಿಮ್ಮ FID ನಂಬರ್ ಹಾಕಿ ಬೆಳೆಹಾನಿ ಪರಿಹಾರ ಚೆಕ್ ಮಾಡಿ

ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ (FRUITS ID) ಪ್ರೊಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ(Parihara Portal) ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ(Direct benefit transfer) ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುದು.

ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.


ಬೆಳೆ ಹಾನಿ ಪರಿಹಾರ(Bele hani parihara) ಪಡೆದುಕೊಳ್ಳಲು (FRUITS ID) ಪ್ರೊಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೊಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್‌ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ (FRUITS ID) ಪ್ರೊಟ್ಸ್ ಐಡಿ ಸೃಜಿಸಿಕೊಳ್ಳಬಹುದು. (FRUITS ID) ಪ್ರೊಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.

ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx 

ನಂತರ ನಿಮ್ಮ ಆಧಾರ್ ನಂಬರ್/Aadhaar number ಹಾಕಿ,search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.

ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ

]]>
Sat, 06 Dec 2025 08:16:06 +0530 shivuagrico
ಇ&ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ; ಏನಿದು ತಂತ್ರಾಂಶ? ಗ್ರಾಮೀಣ ಆಸ್ತಿಗಳಿಗೆ ಇ&ಖಾತಾ ಪಡೆಯುವುದು ಹೇಗೆ? https://krushirushi.in/e-Swathu-2.0-Launched:-How-to-Get-Rural-Property-e-Khata https://krushirushi.in/e-Swathu-2.0-Launched:-How-to-Get-Rural-Property-e-Khata ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚತಂತ್ರ ಸಾಫ್ಟ್‌ವೇರ್‌ನ ನವೀಕರಿಸಿದ ಆವೃತ್ತಿಯಾದ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದೆ. ಈ ಉಪಕ್ರಮದ ಮುಖ್ಯ ಉದ್ದೇಶವು ಗ್ರಾಮೀಣ ಕರ್ನಾಟಕದ 97 ಲಕ್ಷಕ್ಕೂ ಹೆಚ್ಚು ಕೃಷಿಯೇತರ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸಿ, ಅವುಗಳನ್ನು ಅಧಿಕೃತ ತೆರಿಗೆ ವ್ಯಾಪ್ತಿಗೆ ತರುವುದು ಮತ್ತು ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸುವುದಾಗಿದೆ. ಈ ವ್ಯವಸ್ಥೆಯು ಕಾವೇರಿ 2.0 ಸಾಫ್ಟ್‌ವೇರ್‌ನೊಂದಿಗೆ ಸಂಯೋಜನೆಗೊಂಡಿದ್ದು, ನೋಂದಣಿಯನ್ನು ಸರಳಗೊಳಿಸುತ್ತದೆ. ಈ ಹಿನ್ನೆಲೆಯಲ್ಲಿ ಏನಿದು ಇ-ಸ್ವತ್ತು 2.0 ತಂತ್ರಾಂಶ; ಗ್ರಾಮೀಣ ಆಸ್ತಿಗಳಿಗೆ ಇ-ಖಾತಾ ಪಡೆಯುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ.

ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳ ಆಡಳಿತ ಮತ್ತು ತೆರಿಗೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರವು ಸುಧಾರಿತ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದೆ. ಈ ಹೊಸ ಉಪಕ್ರಮವು 97 ಲಕ್ಷಕ್ಕೂ ಹೆಚ್ಚು ಗ್ರಾಮೀಣ ಆಸ್ತಿಗಳನ್ನು ಸಕ್ರಮಗೊಳಿಸಿ ಅಧಿಕೃತ ತೆರಿಗೆ ವ್ಯಾಪ್ತಿಗೆ ತರುವ ಗುರಿ ಹೊಂದಿದೆ. ಇದು ಅಸ್ತಿತ್ವದಲ್ಲಿರುವ ಪಂಚತಂತ್ರ ಸಾಫ್ಟ್‌ವೇರ್‌ನ ನವೀಕರಿಸಿದ ಆವೃತ್ತಿಯಾಗಿದೆ.

ಏನಿದು ಇ- ಇ-ಸ್ವತ್ತು 2.0 ತಂತ್ರಾಂಶ

ಇ-ಸ್ವತ್ತು ಎಂಬುದು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ನಿರ್ವಹಿಸುವ ಒಂದು ಆನ್‌ಲೈನ್ ಪೋರ್ಟಲ್ ಆಗಿದ್ದು, ಗ್ರಾಮೀಣ ಪ್ರದೇಶದ ಆಸ್ತಿ ದಾಖಲೆಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಿ ನಿರ್ವಹಿಸಲು ಸಹಕಾರಿಯಾಗಿದೆ. ಇದರ ಪ್ರಮುಖ ಉದ್ದೇಶ ಆಸ್ತಿ ವಹಿವಾಟುಗಳಲ್ಲಿ ಹೆಚ್ಚಿನ ಪಾರದರ್ಶಕತೆ ತರುವುದು, ವಂಚನೆ ಮತ್ತು ಅನಧಿಕೃತ ನಿವೇಶನಗಳ ನೋಂದಣಿಯನ್ನು ನಿಯಂತ್ರಿಸುವುದಾಗಿದೆ. ಇ-ಸ್ವತ್ತು ಗ್ರಾಮೀಣ ಭಾಗದಲ್ಲಿರುವ ಕೃಷಿಯೇತರ ಖಾಲಿ ಜಾಗಗಳು ಮತ್ತು ಮನೆ ನಿರ್ಮಾಣ ಮಾಡಿರುವ ಜಾಗಗಳಿಗೆ ಅಧಿಕೃತ ಮಾಲೀಕತ್ವದ ಪ್ರಮಾಣ ಪತ್ರವನ್ನು ಡಿಜಿಟಲ್ ರೂಪದಲ್ಲಿ ಹೊಂದುವುದಾಗಿದೆ. ಈ ಪೋರ್ಟಲ್ ಮೂಲಕ ನಾಗರಿಕರು ಫಾರ್ಮ್-9 ಮತ್ತು ಫಾರ್ಮ್-11 ಎಂಬ ಪ್ರಮುಖ ಇ-ಖಾತಾ ದಾಖಲೆಗಳನ್ನು ಪಡೆಯಬಹುದಾಗಿದೆ.

97 ಲಕ್ಷಕ್ಕೂ ಹೆಚ್ಚು ಗ್ರಾಮೀಣ ಆಸ್ತಿಗಳಿಗೆ ಇ-ಖಾತಾ ನೀಡುವ ಗುರಿ

ಆರಂಭಿಕ ಹಂತದಲ್ಲಿ, ಪಂಚಾಯತ್ ರಾಜ್ ಇಲಾಖೆಯು 6.5 ಲಕ್ಷಕ್ಕೂ ಹೆಚ್ಚು ಆಸ್ತಿಗಳನ್ನು ಈ ವ್ಯಾಪ್ತಿಯೊಳಗೆ ತರಲು ಗಮನಹರಿಸುತ್ತಿದೆ. ಈ ಇ-ಸ್ವತ್ತು ಪ್ರಮಾಣ ಪತ್ರದಲ್ಲಿ ಆ ಜಾಗದ ಜಿಪಿಎಸ್ ಫೋಟೋ, ಒಟ್ಟು ವಿಸ್ತೀರ್ಣ, ಮತ್ತು ಮಾಲೀಕರ ಸಂಪೂರ್ಣ ವಿವರಗಳಂತಹ ಮಾಹಿತಿಯನ್ನು ಡಿಜಿಟಲ್ ಮಾದರಿಯಲ್ಲಿ ಸಂಗ್ರಹಿಸಲಾಗುತ್ತದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಇ-ಖಾತಾ ವಿತರಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ರಾಜ್ಯ ಸರ್ಕಾರವು ಇ-ಸ್ವತ್ತು ಉಪಕ್ರಮಕ್ಕೆ ವಿಶೇಷ ಬೆಂಬಲ ವ್ಯವಸ್ಥೆಯನ್ನು ಸ್ಥಾಪಿಸಿದೆ. ಇತ್ತೀಚೆಗೆ ಪ್ರಾರಂಭಿಸಲಾದ ಈ ಕಾರ್ಯಕ್ರಮವು ರಾಜ್ಯದ 97 ಲಕ್ಷಕ್ಕೂ ಹೆಚ್ಚು ಗ್ರಾಮೀಣ ಆಸ್ತಿಗಳನ್ನು ಸಕ್ರಮಗೊಳಿಸಿ ಅಧಿಕೃತ ತೆರಿಗೆ ವ್ಯಾಪ್ತಿಗೆ ತರುವ ಗುರಿ ಹೊಂದಿದೆ.

ಪಾರದರ್ಶಕತೆ: ಇ-ಸ್ವತ್ತು ವೇದಿಕೆ ಆಸ್ತಿ ವಿವರಗಳನ್ನು ಡಿಜಿಟಲ್ ದಾಖಲೆಗಳೊಂದಿಗೆ ಸಂಯೋಜಿಸಿ, ದಾಖಲಾತಿಯನ್ನು ಸುಗಮಗೊಳಿಸುತ್ತದೆ, ಪಾರದರ್ಶಕತೆಯನ್ನು ಖಚಿತಪಡಿಸುತ್ತದೆ ಮತ್ತು ಮಾಲೀಕತ್ವದ ಪರಿಶೀಲನೆಯನ್ನು ಸರಳಗೊಳಿಸುತ್ತದೆ.

ಆಸ್ತಿ ಸಕ್ರಮಗೊಳಿಸುವಿಕೆ: ಸುಮಾರು 90 ಲಕ್ಷಕ್ಕೂ ಹೆಚ್ಚು ಗ್ರಾಮೀಣ ಆಸ್ತಿಗಳನ್ನು ಇ-ಖಾತಾ ಮೂಲಕ ಅಧಿಕೃತ ತೆರಿಗೆ ವ್ಯಾಪ್ತಿಗೆ ತರಲು ಇದು ಒಂದು ಪ್ರಮುಖ ಹೆಜ್ಜೆಯಾಗಿದೆ.

ಸೇವೆಗಳ ಪುನರಾರಂಭ: ಇ-ಸ್ವತ್ತು 2.0 ಪ್ರಾರಂಭದಿಂದಾಗಿ, ಕೆಲವು ಪ್ರದೇಶಗಳಲ್ಲಿ ಸ್ಥಗಿತಗೊಂಡಿದ್ದ ಫಾರ್ಮ್ 11B ಖಾತಾ ವಿತರಣೆ ಮತ್ತು ನಿವೇಶನ ನೋಂದಣಿಯಂತಹ ಸೇವೆಗಳು ಪುನರಾರಂಭಗೊಂಡಿವೆ.

ನೋಂದಣಿ ಇಲಾಖೆಯೊಂದಿಗೆ ಸಂಯೋಜನೆ: ಈ ವೇದಿಕೆಯು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ಸಾಫ್ಟ್‌ವೇರ್‌ನೊಂದಿಗೆ ಸಂಯೋಜನೆಗೊಂಡಿದ್ದು, ಕೃಷಿಯೇತರ ಆಸ್ತಿಗಳ ಮಾರಾಟ ನೋಂದಣಿಯನ್ನು ತಡೆರಹಿತವಾಗಿ ಮಾಡಲು ಸಹಾಯ ಮಾಡುತ್ತದೆ.

ಫಾರ್ಮ್ 9 ಎಂದರೇನು?

ಫಾರ್ಮ್ 9 ಎಂದರೆ, ಗ್ರಾಮೀಣ ಕರ್ನಾಟಕದ ಕೃಷಿಯೇತರ ಆಸ್ತಿಗಳಿಗೆ ಅಗತ್ಯವಾದ ಒಂದು ಕಾನೂನು ದಾಖಲೆಯಾಗಿದೆ. ಇ-ಸ್ವತ್ತು ಪೋರ್ಟಲ್ ಅಡಿಯಲ್ಲಿ ಗ್ರಾಮ ಪಂಚಾಯತ್‌ನಿಂದ ನೀಡಲಾದ ಈ ದಾಖಲೆಯು, ಕೃಷಿಯೇತರ ಆಸ್ತಿಯ ಮಾಲೀಕತ್ವದ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಕೃಷಿಯೇತರ ಭೂಮಿಯನ್ನು ಖರೀದಿ ಅಥವಾ ಮಾರಾಟ ಮಾಡುವಾಗ ಇದು ಕಡ್ಡಾಯ. ಈ ಫಾರ್ಮ್ ಇಲ್ಲದೆ ಆಸ್ತಿ ವಹಿವಾಟು ಕಾನೂನುಬದ್ಧವಾಗಿ ಮಾನ್ಯವಾಗಿರುವುದಿಲ್ಲ.

ಇ-ಖಾತಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಪ್ರಶ್ನೆಗಳು ಮತ್ತು ತಾಂತ್ರಿಕ ಸಮಸ್ಯೆಗಳನ್ನು ನಿಭಾಯಿಸಲು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಯಶವಂತಪುರದಲ್ಲಿ ಖಾಸಗಿ ಸಂಸ್ಥೆಯ ಮೂಲಕ ವಿಶೇಷ ಕಾಲ್ ಸೆಂಟರ್ ಅನ್ನು ಸ್ಥಾಪಿಸಿದೆ. ಆರಂಭಿಕ ಹಂತದಲ್ಲಿ ಕಾಲ್ ಸೆಂಟರ್‌ಗೆ ಸಹಾಯ ಮಾಡಲು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಂದ ಒಟ್ಟು 34 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನುನಿಯೋಜಿಸಲಾಗಿದೆ. ಈ ಪಿಡಿಒಗಳು ಆಪರೇಟರ್‌ಗಳಿಗೆ ಇ-ಸ್ವತ್ತು ಪೋರ್ಟಲ್ ಮತ್ತು ನಿಯಮಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು, ಇ-ಖಾತಾ ರಚಿಸುವ ವಿಧಾನಗಳನ್ನು ವಿವರಿಸಲು ಮತ್ತು ಸಾರ್ವಜನಿಕ ಪ್ರಶ್ನೆಗಳಿಗೆ ಉತ್ತರಿಸಲು ಸಹಾಯ ಮಾಡಲಿದ್ದಾರೆ. ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರಾದ ಅರುಂಧತಿ ಚಂದ್ರಶೇಖರ್ ಅವರ ಪ್ರಕಾರ, ಪ್ರತಿ ಪಿಡಿಒ ಡಿಸೆಂಬರ್ 2 ರಿಂದ ಜನವರಿ 4 ರವರೆಗೆ ಸರದಿ ಆಧಾರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಆ ನಂತರ ಕಾಲ್ ಸೆಂಟರ್ ತಂಡವು ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ.

]]>
Fri, 05 Dec 2025 17:51:01 +0530 shivuagrico
Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ https://krushirushi.in/Tahasildar-varification-status-approved-2310 https://krushirushi.in/Tahasildar-varification-status-approved-2310 Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ


ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ

ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ

ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ

Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.

]]>
Fri, 05 Dec 2025 08:32:02 +0530 shivuagrico
ಭೂ ಒಡೆತನ ಯೋಜನೆ 2025: ಭೂಮಿ ಖರೀದಿಗೆ 50 ಸಬ್ಸಿಡಿ 25 ಲಕ್ಷ ರೂ. ಸಾಲ | ಅರ್ಜಿ ಪ್ರಕ್ರಿಯೆ ವಿವರ https://krushirushi.in/Bhoo-Odetana-Yojane-25-lakh-loan-details https://krushirushi.in/Bhoo-Odetana-Yojane-25-lakh-loan-details ಜಾತಿಯ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಭೂಮಿ ಖರೀದಿಸಲು ಸರ್ಕಾರ ನೀಡುತ್ತಿರುವ 'ಭೂ-ಒಡೆತನ ಯೋಜನೆ'ಯಡಿ ರಾಜ್ಯದ 31 ಜಿಲ್ಲೆಗಳಲ್ಲಿ ಭೂಮಿ ನೀಡುವ ಪ್ರಕ್ರಿಯೆ ಮುಂದುವರೆದಿದೆ. ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಸೇರಿದಂತೆ ಹಲವು ಅಭಿವೃದ್ಧಿ ನಿಗಮಗಳ ಮೂಲಕ ಈ ಯೋಜನೆ ಜಾರಿಯಲ್ಲಿದೆ.

ಯೋಜನೆಯಡಿ SC ಸಮುದಾಯದ ಭೂರಹಿತ ಮಹಿಳೆಯರಿಗೆ ಖುಷ್ಕಿ, ತರಿ ಅಥವಾ ಬಾಗಾಯ್ತು ಜಮೀನನ್ನು ಖರೀದಿಸಲು ₹20 ಲಕ್ಷದಿಂದ ₹25 ಲಕ್ಷವರೆಗೆ ಆರ್ಥಿಕ ನೆರವು ಒದಗಿಸಲಾಗುತ್ತದೆ. ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಘಟಕ ವೆಚ್ಚ ₹25 ಲಕ್ಷವಾಗಿದ್ದು, ಉಳಿದ ಜಿಲ್ಲೆಗಳಲ್ಲಿ ₹20 ಲಕ್ಷ ನಿಗದಿಪಡಿಸಲಾಗಿದೆ.

ಈ ಘಟಕ ವೆಚ್ಚದಲ್ಲಿ 50% ಸಹಾಯಧನ ಹಾಗೂ 50% ಸಾಲ ಇದ್ದು, ನೀಡಲಾದ ಸಾಲವನ್ನು 10 ವರ್ಷಗಳಲ್ಲಿ 6% ಬಡ್ಡಿದರಕ್ಕೆ ಮರುಪಾವತಿ ಮಾಡಬೇಕು. ಖರೀದಿಸುವ ಜಮೀನು ಫಲಾನುಭವಿಯ ಮನೆಯಿಂದ 10 ಕಿಮೀ ವ್ಯಾಪ್ತಿಯೊಳಗೆ ಇರಬೇಕು.

ಯೋಜನೆಯ ಪ್ರಮುಖ ಅಂಶಗಳು

ಯೋಜನೆ ಕೇವಲ SC ಸಮುದಾಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಮಾತ್ರ ಅನ್ವಯ.

SC/ST ಗೆ ಸೇರಿದವರಿಂದ ಭೂಮಿ ಖರೀದಿಸಲು ಅವಕಾಶವಿಲ್ಲ.

ಕನಿಷ್ಠ 2 ಎಕರೆ ಒಣಭೂಮಿ / 1 ಎಕರೆ ನೀರಾವರಿ / 0.5 ಎಕರೆ ಬಾಗಾಯ್ತು ಖರೀದಿ ಮಾನ್ಯ.

ಜಮೀನು ದರವನ್ನು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಸಮಿತಿ ಅಂತಿಮಗೊಳಿಸುತ್ತದೆ.

ಅಂತಿಮ ಮಂಜೂರಾತಿ ಅಧಿಕಾರ ಜಿಲ್ಲಾಧಿಕಾರಿಗೆ.

ಅರ್ಜಿದಾರರಿಗೆ ಅಗತ್ಯ ಅರ್ಹತೆ

ಪರಿಶಿಷ್ಟ ಜಾತಿಗೆ ಸೇರಿದಿರಬೇಕು.

ಭೂರಹಿತ ಕೃಷಿ ಕಾರ್ಮಿಕರಾಗಿರಬೇಕು (ತಹಶೀಲ್ದಾರರಿಂದ ಪ್ರಮಾಣ ಪತ್ರ).

ಕುಟುಂಬದಲ್ಲಿ ಯಾರೂ ಸರ್ಕಾರಿ/ಅರೆ ಸರ್ಕಾರಿ ನೌಕರರಾಗಿರಬಾರದು.

ಕರ್ನಾಟಕದ ನಿವಾಸಿಯಾಗಿರಬೇಕು.

ಜಾತಿ, ಆದಾಯ, ರೇಷನ್, ಆಧಾರ್ ಸೇರಿದಂತೆ ಎಲ್ಲಾ ದಾಖಲೆಗಳು ಕಡ್ಡಾಯ.

ಬೇಕಾಗುವ ದಾಖಲೆಗಳು

ಆಧಾರ್ ಕಾರ್ಡ್

ಜಾತಿ ಮತ್ತು ಆದಾಯ ಪ್ರಮಾಣ ಪತ್ರ (RD Number ಸಹಿತ)

ಭೂರಹಿತ ಕೃಷಿ ಕಾರ್ಮಿಕರ ಪ್ರಮಾಣ ಪತ್ರ

ರೇಷನ್ ಕಾರ್ಡ್

ಭೂ ಮಾಲೀಕರ ಮುಚ್ಚಳಿಕೆ ಪತ್ರ

ಭೂ ಮಾಲೀಕರ ವಂಶಾವಳಿ, EC, ಪಹಣಿ, ಮ್ಯೂಟೇಶನ್

ಫಲಾನುಭವಿಯ ಫೋಟೋ

ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ

ಅರ್ಜಿ ಸಲ್ಲಿಸಲು https://sevasindhu.karnataka.gov.in

ಹೊಸ ಬಳಕೆದಾರರಿಗೆ ಮೊದಲು ನೋಂದಣಿ ಕಡ್ಡಾಯ

ಲಾಗಿನ್‌ ಆದ ಬಳಿಕ "ಇಲಾಖೆಗಳು ಮತ್ತು ಸೇವೆಗಳು" ವಿಭಾಗದಲ್ಲಿ 'ಭೂ ಒಡೆತನ ಯೋಜನೆ' ಹುಡುಕಬೇಕು

ಆನ್‌ಲೈನ್ ಅರ್ಜಿ ಭರ್ತಿ ಮಾಡಿ

ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ

ಅರ್ಜಿ ಸಲ್ಲಿಸಿದ ಬಳಿಕ ಸ್ವೀಕೃತಿ / ಟೋಕನ್ ಸಂಖ್ಯೆ ದೊರಕುತ್ತದೆ

ಅರ್ಜಿ ಸ್ಥಿತಿಯನ್ನು ಪೋರ್ಟಲ್‌ನಲ್ಲಿ ಟ್ರ್ಯಾಕ್ ಮಾಡಬಹುದು

ಯೋಜನೆಯ ಮೂಲಕ ರಾಜ್ಯದ ಪರಿಶಿಷ್ಟ ಜಾತಿ ಸಮುದಾಯದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರು ಭೂಮಾಲೀಕರಾಗುವ ಅವಕಾಶ ಪಡೆದು, ಸಾಮಾಜಿಕ ಮತ್ತು ಆರ್ಥಿಕ ಬಲವರ್ಧನೆಗೆ ಇದು ಮಹತ್ವದ ಹೆಜ್ಜೆಯಾಗಲಿದೆ.

]]>
Thu, 04 Dec 2025 11:46:04 +0530 shivuagrico
ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ&Aadhaar not linked croploss farmers list https://krushirushi.in/Aadhar-not-linked-bele-vime-farmers-list-2308 https://krushirushi.in/Aadhar-not-linked-bele-vime-farmers-list-2308 ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ-Aadhaar not linked croploss farmers list

15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635 

ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/AadharNotSeededReport.aspx

ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ

]]>
Thu, 04 Dec 2025 07:58:48 +0530 shivuagrico
ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೊಬ್ಬರಿ ಶೇಖರಣಾ ಘಟಕ ನಿರ್ಮಾಣಕ್ಕೆ ಆರ್ಥಿಕ ಸಹಾಯ https://krushirushi.in/Financial-assistance-announced-for-setting-up-coconut-storage-units. https://krushirushi.in/Financial-assistance-announced-for-setting-up-coconut-storage-units. ನಿಷ್ಠ 2.5 ಎಕರೆ ತೆಂಗಿನ ತೋಟ ಹೊಂದಿರುವ ರೈತರಿಗೆ ಕೊಬ್ಬರಿ ಸಂಸ್ಕರಣಾ/ಶೇಖರಣಾ ಘಟಕ(ಪ್ರಾಥಮಿಕ ಸಂಸ್ಕರಣಾ ಘಟಕ) ನಿರ್ಮಾಣಕ್ಕೆ ತೆಂಗು ಅಭಿವೃದ್ಧಿ ಮಂಡಳಿಯಿಂದ ಆರ್ಥಿಕ ಸಹಾಯ ಲಭ್ಯವಿದ್ದು, ಆಸಕ್ತಿ ಹೊಂದಿರುವವರು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕಾಗಿ ಕೋರಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 15 ಆಗಿದ್ದು, ಅರ್ಜಿಗಳನ್ನು ಉಪ ನಿರ್ದೇಶಕರು (ಮಾರ್ಕೆಟಿಂಗ್), ಪ್ರಾದೇಶಿಕ ಕಚೇರಿ, ತೆಂಗು ಅಭಿವೃದ್ಧಿ ಮಂಡಳಿ, ಕೆರಾ ಭವನ, ರಾಯಲ್ ಮೀನಾಕ್ಷಿ ಮಾಲ್ ಎದುರು, ಬನ್ನೇರುಘಟ್ಟ ರಸ್ತೆ, ಹುಳಿಮಾವು, ಬೆಂಗಳೂರು - 560076. ದೂರವಾಣಿ-080-26593750 website link- https://coconutboard.gov.in/docs/AppForm_ProcessingCentre.pdf ವಿಳಾಸಕ್ಕೆ ಕಳುಹಿಸಬೇಕಾಗಿ ತಿಳಿಸಲಾಗಿದೆ.

]]>
Wed, 03 Dec 2025 11:35:14 +0530 shivuagrico
Bele parihara list&ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ https://krushirushi.in/Bele-parihara-list-2306 https://krushirushi.in/Bele-parihara-list-2306 Bele parihara-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಮುಂಗಾರು ಹಂಗಾಮಿನಲ್ಲಾದ ಅತಿವೃಷ್ಟಿಯಿಂದ ಬೆಳೆನಷ್ಟ ಅನುಭವಿಸಿದ 27 ಜಿಲ್ಲೆಗಳ 14.24 ಲಕ್ಷ ರೈತರಿಗೆ ರಾಜ್ಯ ಸರ್ಕಾರ ₹1,033.60 ಕೋಟಿ ಪರಿಹಾರ ನೀಡಿದ್ದು, ಎಲ್ಲ ರೈತರ ಬ್ಯಾಂಕ್‌ ಖಾತೆಗಳಿಗೆ 24 ಗಂಟೆಗಳಲ್ಲಿ ಈ ಮೊತ್ತ ಜಮೆಯಾಗಿದೆ.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ರಾಜ್ಯ ವಿಪತ್ತು ನಿರ್ವಹಣಾ ನಿಧಿಯ (ಎಸ್‌ಡಿಆರ್‌ಎಫ್‌) ₹1,218 ಕೋಟಿ ಮೊತ್ತದ ಹೊರತಾಗಿ ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್‌ಗೆ ₹8,500 ಹೆಚ್ಚುವರಿ ಪರಿಹಾರ ಘೋಷಿಸಿದೆ. ಈ ವಿಶೇಷ ಪ್ಯಾಕೇಜ್‌ ವಿತರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.

ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಂಗಾರಿನಲ್ಲಿ 82.56 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಜೂನ್‌ನಿಂದ ಸೆಪ್ಟಂಬರ್‌ ಅವಧಿಯಲ್ಲಿನ ಅತಿವೃಷ್ಟಿಯಿಂದ 14.58 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿತ್ತು. ₹10,748 ಕೋಟಿ ಹಾನಿ ಅಂದಾಜಿಸಲಾಗಿತ್ತು. ಮುಖ್ಯವಾಗಿ ತೊಗರಿ 5.36 ಲಕ್ಷ ಹೆಕ್ಟೇರ್‌, ಹೆಸರು ಕಾಳು 2.63 ಲಕ್ಷ ಹೆಕ್ಟೇರ್‌, ಹತ್ತಿ 2.68 ಲಕ್ಷ ಹೆಕ್ಟೇರ್‌ ಹಾಗೂ ಮೆಕ್ಕೆಜೋಳ 1.21 ಲಕ್ಷ ಹೆಕ್ಟೇರ್‌ ಹಾನಿಯಾಗಿರುವುದು ಜಂಟಿ ಸಮೀಕ್ಷೆಯಲ್ಲಿ ದೃಢಪಟ್ಟಿತ್ತು’ ಎಂದರು.

ಎಸ್‌ಡಿಆರ್‌ಎಫ್‌ ಮಾನದಂಡಗಳ ಪ್ರಕಾರ ಗರಿಷ್ಠ ಎರಡು ಹೆಕ್ಟೇರ್‌ಗೆ ಸೀಮಿತವಾಗಿ 14.24 ಲಕ್ಷ ರೈತರಿಗೆ ₹1,218.03 ಕೋಟಿ ಪರಿಹಾರ ವಿತರಿಸಲಾಗಿದೆ. ಈಗ ನೀಡುತ್ತಿರುವ ಹೆಚ್ಚುವರಿ ಪರಿಹಾರ ₹1,033.60 ಕೋಟಿ ಸೇರಿ ಒಟ್ಟು ₹2,251.63 ಕೋಟಿ  ನೀಡಿದಂತಾಗುತ್ತದೆ.

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Wed, 03 Dec 2025 07:56:37 +0530 shivuagrico
ಮೆಕ್ಕೆಜೋಳ ಬೆಳೆಗಾರರಿಗೆ ಸಿಹಿ ಸುದ್ದಿ; ನೇರ ಖರೀದಿಗೆ ಆದೇಶ ನೀಡಿದ ಸರ್ಕಾರ; ಕ್ವಿಂಟಾಲ್‌ಗೆ ದರ ಎಷ್ಟು? https://krushirushi.in/government-has-ordered-direct-procurement-maize https://krushirushi.in/government-has-ordered-direct-procurement-maize ಮೆಕ್ಕೆಜೋಳ ಬೆಲೆ ಕುಸಿದು ಕಂಗಾಲಾಗಿರುವ ರೈತರು ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ನೀಡಲು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಸಭಾಂಗಣದಲ್ಲಿ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರೊಂದಿಗೆ ನಡೆಸಿದ ಸಭೆಯಲ್ಲಿ ಮಹತ್ವ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮೆಕ್ಕೆಜೋಳ ಉತ್ಪಾದನೆಯಾಗಿದ್ದು, ರೈತರಿಗೆ ನೆರವಾಗುವ ಉದ್ದೇಶದಿಂದ ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪಶು ಹಾಗೂ ಕುಕ್ಕುಟ ಆಹಾರ ಉತ್ಪಾದಕರು ಕೇಂದ್ರ ಸರ್ಕಾರ ನಿಗದಿಪಡಿಸಿರುವ ರೂ. 2400 ರ ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕರ್ನಾಟಕ ಮಾರುಕಟ್ಟೆ ಫೆಡರೇಶನ್ ಮೂಲಕ ರೈತರಿಂದ ಮೆಕ್ಕೆಜೋಳ ಖರೀದಿಸಿ ಸರಬರಾಜು ಮಾಡಲಾಗುವುದು. ಸಾಗಾಣಿಕೆ ವೆಚ್ಚ, ಲೋಡಿಂಗ್, ಅನ್ಲೋಡಿಂಗ್ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಕುಕ್ಕುಟ ಉದ್ಯಮಕ್ಕೆ ಯಾವುದೇ ತೊಂದರೆಯಾಗದಂತೆ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿದರು. ಮಾರುಕಟ್ಟೆಯಲ್ಲಿ ಮೆಕ್ಕೆ ಜೋಳ ದರ ಕುಸಿದಿರುವುದರಿಂದ ರೈತರಿಗೆ ನೆರವಾಗುವ ಉದ್ದೇಶದಿಂದ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಡಿಸ್ಟಿಲರಿಗಳು 7ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸುವ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಿದೆ. ಕೆಎಂಎಫ್ 50ಸಾವಿರ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಇದೇ ರೀತಿ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದನಾ ವಲಯ ಇಂಡೆಂಟ್ ನೀಡಿ 5ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಯನ್ನು ತಕ್ಷಣ ಪ್ರಾರಂಭಿಸಲು ಸೂಚನೆ ನೀಡಿದರು. ರಾಜ್ಯದಲ್ಲಿ ಖಾರಿಫ್ ಹಂಗಾಮಿನಲ್ಲಿ 17.6 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿದ್ದು, 53.8 ಲಕ್ಷ ಮೆಕ್ಕೆಜೋಳ ಉತ್ಪಾದನೆ ಅಂದಾಜಿಸಲಾಗಿದೆ. ಇದರಲ್ಲಿ ಶೇ.50-60ರಷ್ಟು ಮೆಕ್ಕೆಜೋಳವನ್ನು ಕೋಳಿ ಮತ್ತು ಪಶು ಆಹಾರಕ್ಕಾಗಿ ಉಪಯೋಗಿಸಲಾಗುತ್ತದೆ. ಪ್ರತಿವರ್ಷ ಅಂದಾಜು 25.89 ಲಕ್ಷ ಟನ್ ಮೆಕ್ಕೆಜೋಳವನ್ನು ಕೋಳಿ ಮತ್ತು ಪಶು ಆಹಾರಕ್ಕಾಗಿ ಉಪಯೋಗಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಚಿವರಾದ ಕೆ.ಹೆಚ್.ಮುನಿಯಪ್ಪ, ಕೆ. ವೆಂಕಟೇಶ್, ಆರ್.ಬಿ.ತಿಮ್ಮಾಪುರ್, ಎನ್. ಚಲುವರಾಯ ಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.

]]>
Tue, 02 Dec 2025 10:39:13 +0530 shivuagrico
Aadhar based bele parihara&ನಿಮ್ಮ ಆಧಾರ್ ನಂಬರ್ ಹಾಕಿ ಬೆಳೆ ಪರಿಹಾರ ಜಮಾ ಚೆಕ್ ಮಾಡಿ https://krushirushi.in/Aadhar-based-bele-parihara-2304 https://krushirushi.in/Aadhar-based-bele-parihara-2304 Aadhar based bele parihara-ನಿಮ್ಮ ಆಧಾರ್ ನಂಬರ್ ಹಾಕಿ ಬೆಳೆ ಪರಿಹಾರ ಜಮಾ ಚೆಕ್ ಮಾಡಿ

ಮಳೆಯಾಶ್ರಿತ ಬೆಳೆಗೆ ಎರಡು ಹೆಕ್ಟರಿಗೆ ಸೀಮಿತವಾಗಿ ಪ್ರತಿ ಹೆಕ್ಟರಿಗೆ 8500 ರೂಪಾಯಿ ಪರಿಹಾರ ನೀಡಲಾಗುತ್ತದೆ.

 ನೀರಾವರಿ ಬೆಳೆಗೆ ಪ್ರತಿ ಹೆಕ್ಟರಿಗೆ 17000 ರೂಪಾಯಿ.

 ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟರಿಗೆ 22,000

 ರೇಷ್ಮೆ ಬೆಳೆಗೆ ಪ್ರತಿ ಹೆಕ್ಟರಿಗೆ 6000 ಪರಿಹಾರ ಮೊತ್ತ ನಿಗದಿಪಡಿಸಲಾಗಿದೆ

ಬೆಳೆ ಪರಿಹಾರ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://landrecords.karnataka.gov.in/PariharaPayment/

ನಂತರ ಆಧಾರ್ ನಂಬರ್ select ಮಾಡಿ

ನಂತರ calamity type "Flood" ಎಂದು ವರ್ಷ "2024-25" ಎಂದು select ಮಾಡಿ

ನಿಮ್ಮ ಆಧಾರ್ ನಂಬರ್ ಹಾಕಿ,Captch type ಮಾಡಿ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಬರಪರಿಹಾರ ಜಮಾ ತೋರಿಸುತ್ತದೆ

]]>
Tue, 02 Dec 2025 08:25:29 +0530 shivuagrico
ಪಿಎಂ ಕುಸುಮ್&ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಆಹ್ವಾನ https://krushirushi.in/Applications-invited-for-Solar-Pump-Set-Subsidy https://krushirushi.in/Applications-invited-for-Solar-Pump-Set-Subsidy ರಾಜ್ಯದಲ್ಲಿ MNRE ಮತ್ತು KREDL ಸಹಯೋಗದೊಂದಿಗೆ ರೈತರ ಜಮೀನಿನ ಕೊಳವೆ/ತೆರದ ಬಾವಿಗಳಿಗೆ ಸೋಲಾರ್ ಪಂಪ್-ಸೆಟ್ ಗಳನ್ನು ಅಳವಡಿಸಲು ರೈತರಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ, www.souramitra.com ವೆಬ್‌ಸೈಟ್ ನಲ್ಲಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

ಸದರಿ ಪೋರ್ಟಲ್ ಮುಖಾಂತರ ಸೋಲಾರ್ ಪಂಪ್‌-ಸೆಟ್‌ಗಳ www.souramitra.com ನಲ್ಲಿ ಅರ್ಜಿ ನೋಂದಾಯಿಸಿಕೊಂಡು ವೆಂಡರ್ /ಏಜೆನ್ಸಿ ಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ರೈತಬಾಂಧವರಿಗೆ ತಿಳಿಯಪಡಿಸುವುದೇನೆಂದರೆ, PM-KUSUM Component-B ಯೋಜನೆಗೆ ಸಂಬಂಧಿಸಿದಂತೆ, www.kredi.karnataka.gov.in ವೆಬ್‌ಸೈಟ್‌ನಲ್ಲಿ ಹೊರಡಿಸಿದ ಪ್ರಕಟಣೆ/ಮಾಹಿತಿಗಳನ್ನು ಮಾತ್ರ ಪರಿಗಣಿಸಲು ಕೋರಲಾಗಿದೆ. ಸೌರ ಪಂಪ್ ಸೆಟ್ ನೋಂದಣಿ ಹಾಗೂ ಪಾವತಿಗೆ ಸಂಬಂಧಿಸಿದಂತೆ www.souramitra.com ನಲ್ಲಿ ಹಾಗೂ KREDL ನ ಸಹಾಯವಾಣಿ ಸಂಖ್ಯೆ: 080-22202100 & 8095132100 ಮುಖಾಂತರ ಮಾತ್ರವೇ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ ಹಾಗೂ ಸದರಿ ನೋಂದಣಿ ಪ್ರಕ್ರಿಯೆಯಲ್ಲಿ ಸ್ವೀಕೃತವಾಗುವ ಒಟಿಪಿಗಳನ್ನು ಯಾರೊಂದಿಗೂ ಹಂಚಿಕೊಳ್ಳದೇ ತಾವೇ ನೋಂದಾಯಿಸಿಕೊಳ್ಳಲು ಕೋರಲಾಗಿದೆ.

]]>
Mon, 01 Dec 2025 09:59:56 +0530 shivuagrico
Crop loss&ಈ ಜಿಲ್ಲೆಯ ರೈತರ ಖಾತೆಗೆ 140 ಕೋಟಿ ಬೆಳೆ ಪರಿಹಾರ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/169-lakh-hectares-crop-damaged-due-to-heavy-rains-140-crore-credited-to-farmers https://krushirushi.in/169-lakh-hectares-crop-damaged-due-to-heavy-rains-140-crore-credited-to-farmers Crop loss-ಈ ಜಿಲ್ಲೆಯ ರೈತರ ಖಾತೆಗೆ 140 ಕೋಟಿ ಬೆಳೆ ಪರಿಹಾರ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ


ಜಿಲ್ಲೆಯಲ್ಲಿ ಉಂಟಾದ ಅತಿವೃಷ್ಟಿಯಿಂದ 1.69 ಲಕ್ಷ ಹೆಕ್ಟರ್ ಬೆಳೆ ಹಾನಿಯಾಗಿದ್ದು, NDRF & SDRF ನಿಯಮ ಪ್ರಕಾರ 140 ಕೋಟಿ ರೂ. ಹಣ ರೈತರ ಖಾತೆಗೆ ಜಮೆ ಆಗಿದೆ ಎಂದು ಸಚಿವ ಈಶ್ವರ್ ಖಂಡ್ರೆ (Eshwar Khandre) ತಿಳಿಸಿದರು.

1.80 ಲಕ್ಷ ರೈತರ ಖಾತೆಗೆ 140 ಕೋಟಿ ರೂ. ಪರಿಹಾರ ಹಣ ಜಮೆ ಆಗಿದ್ದು, ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ಪ್ರತಿ ಹೆಕ್ಟೇರ್‌ಗೆ 8500 ರೂ. ಕೂಡ ಬಿಡುಗಡೆ ಆಗಿದೆ. ಜೊತೆಗೆ ವೈಮಾನಿಕ ಸಮೀಕ್ಷೆ ನಡೆಸಿ ಸಿಎಂ ಘೋಷಣೆ ಮಾಡಿದ್ದ 130 ಕೋಟಿ ರೂ. ಬಿಡುಗಡೆಯಾಗಿದೆ. ಒಟ್ಟು 280 ಕೋಟಿ ರೂ.ಗಳ ಪೈಕಿ ಈವರೆಗೆ 258 ಕೋಟಿ ರೂ. ರೈತರ ಖಾತೆಗೆ ಜಮೆಯಾಗಿದೆ ಎಂದು ಮಾಹಿತಿ ನೀಡಿದರು

ಇನ್ನೂ 20 ಕೋಟಿ ರೂ. ತಾಂತ್ರಿಕ ಸಮಸ್ಯೆಯಿಂದ ಖಾತೆಗೆ ಜಮೆ ಆಗಿಲ್ಲ. ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಆ ಹಣವು ಕೂಡ ಬರುತ್ತೆ. ಕಡಿಮೆ ಸಮಯದಲ್ಲಿ ಕೊಟ್ಟ ಮಾತಿನಂತೆ ರೈತರ ಖಾತೆಗೆ ಬೆಳೆ ಪರಿಹಾರದ ಹಣ ಜಮೆ ಮಾಡಿದ್ದೇವೆ. ಬೆಳೆ ವಿಮೆಯ 40 ಕೋಟಿ ರೂ. ಹಣ ಬಿಡುಗಡೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದು, ನಮ್ಮ ಸರ್ಕಾರ ರೈತರ ಪರ ಹಾಗೂ ರೈತರ ಬಗ್ಗೆ ಕಾಳಜಿಯುಳ್ಳ ಸರ್ಕಾರವಾಗಿದೆ ಎಂದು ಹೇಳಿದರು.

ಆದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಬೆಳೆ ಪರಿಹಾರ ಬಿಡುಗಡೆಯಾಗಿದೆ

ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

]]>
Sun, 30 Nov 2025 15:30:27 +0530 shivuagrico
Bele parihara&ನನ್ನ ಖಾತೆಗೆ 7,000 ಬೆಳೆ ಪರಿಹಾರ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Bele-parihara-2300 https://krushirushi.in/Bele-parihara-2300

Bele parihara-ರಾಜ್ಯದ 27 ಜಿಲ್ಲೆಗಳ 14.24 ಲಕ್ಷ ರೈತರಿಗೆ ರಾಜ್ಯ ಸರ್ಕಾರ ₹1,033.60 ಕೋಟಿ ಬೆಳೆಹಾನಿ ಪರಿಹಾರ

ಮುಂಗಾರು ಹಂಗಾಮಿನಲ್ಲಾದ ಅತಿವೃಷ್ಟಿಯಿಂದ ಬೆಳೆನಷ್ಟ ಅನುಭವಿಸಿದ 27 ಜಿಲ್ಲೆಗಳ 14.24 ಲಕ್ಷ ರೈತರಿಗೆ ರಾಜ್ಯ ಸರ್ಕಾರ ₹1,033.60 ಕೋಟಿ ಪರಿಹಾರ ನೀಡಿದ್ದು, ಎಲ್ಲ ರೈತರ ಬ್ಯಾಂಕ್‌ ಖಾತೆಗಳಿಗೆ 24 ಗಂಟೆಗಳಲ್ಲಿ ಈ ಮೊತ್ತ ಜಮೆಯಾಗಲಿದೆ.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ರಾಜ್ಯ ವಿಪತ್ತು ನಿರ್ವಹಣಾ ನಿಧಿಯ (ಎಸ್‌ಡಿಆರ್‌ಎಫ್‌) ₹1,218 ಕೋಟಿ ಮೊತ್ತದ ಹೊರತಾಗಿ ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್‌ಗೆ ₹8,500 ಹೆಚ್ಚುವರಿ ಪರಿಹಾರ ಘೋಷಿಸಿದೆ. ಈ ವಿಶೇಷ ಪ್ಯಾಕೇಜ್‌ ವಿತರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.

ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಂಗಾರಿನಲ್ಲಿ 82.56 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಜೂನ್‌ನಿಂದ ಸೆಪ್ಟಂಬರ್‌ ಅವಧಿಯಲ್ಲಿನ ಅತಿವೃಷ್ಟಿಯಿಂದ 14.58 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿತ್ತು. ₹10,748 ಕೋಟಿ ಹಾನಿ ಅಂದಾಜಿಸಲಾಗಿತ್ತು. ಮುಖ್ಯವಾಗಿ ತೊಗರಿ 5.36 ಲಕ್ಷ ಹೆಕ್ಟೇರ್‌, ಹೆಸರು ಕಾಳು 2.63 ಲಕ್ಷ ಹೆಕ್ಟೇರ್‌, ಹತ್ತಿ 2.68 ಲಕ್ಷ ಹೆಕ್ಟೇರ್‌ ಹಾಗೂ ಮೆಕ್ಕೆಜೋಳ 1.21 ಲಕ್ಷ ಹೆಕ್ಟೇರ್‌ ಹಾನಿಯಾಗಿರುವುದು ಜಂಟಿ ಸಮೀಕ್ಷೆಯಲ್ಲಿ ದೃಢಪಟ್ಟಿತ್ತು’ ಎಂದರು.

ಎಸ್‌ಡಿಆರ್‌ಎಫ್‌ ಮಾನದಂಡಗಳ ಪ್ರಕಾರ ಗರಿಷ್ಠ ಎರಡು ಹೆಕ್ಟೇರ್‌ಗೆ ಸೀಮಿತವಾಗಿ 14.24 ಲಕ್ಷ ರೈತರಿಗೆ ₹1,218.03 ಕೋಟಿ ಪರಿಹಾರ ವಿತರಿಸಲಾಗಿದೆ. ಈಗ ನೀಡುತ್ತಿರುವ ಹೆಚ್ಚುವರಿ ಪರಿಹಾರ ₹1,033.60 ಕೋಟಿ ಸೇರಿ ಒಟ್ಟು ₹2,251.63 ಕೋಟಿ  ನೀಡಿದಂತಾಗುತ್ತದೆ.

Bele parihara-ನನ್ನ ಖಾತೆಗೆ 7,000 ಬೆಳೆ ಪರಿಹಾರ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Sat, 29 Nov 2025 10:00:04 +0530 shivuagrico
Maize MSP&ರೈತರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ.MSP ದರದಲ್ಲಿ ಮೆಕ್ಕೆಜೋಳ ಖರೀದಿ https://krushirushi.in/Maize-MSP-2299 https://krushirushi.in/Maize-MSP-2299 Maize MSP-ರೈತರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ.MSP ದರದಲ್ಲಿ ಮೆಕ್ಕೆಜೋಳ ಖರೀದಿ

ಡಿಸ್ಟಿಲರಿಗಳು ನೇರವಾಗಿ ರೈತರಿಂದ ಕನಿಷ್ಠ ಬೆಂಬಲ ದರ ನೀಡಿ ಮೆಕ್ಕೆಜೋಳ ಖರೀದಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸೂಚನೆ ನೀಡಿದ್ದಾರೆ.

ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆಗೆ ಸಂಬಂಧಿಸಿದಂತೆ ವಿಧಾನಸೌಧದ ಸಭಾಂಗಣದಲ್ಲಿ ಮುಖ್ಯಮಂತ್ರಿಗಳು ಸಭೆ ನಡೆಸಿದರು.

ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬ ಬಗ್ಗೆ ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದ್ದು, ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು ಎಂದು ಹೇಳಿದರು.

ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್‌ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ. ಇದರ ಪ್ರಕಾರ ಎಲ್ಲಾ ಡಿಸ್ಟಿಲರಿಗಳು ಕಾರ್ಯ ನಿರ್ವಹಿಸಬೇಕಾಗಿದೆ. ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್‌ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ. ಇದರ ಪ್ರಕಾರ ಎಲ್ಲಾ ಡಿಸ್ಟಿಲರಿಗಳು ಕಾರ್ಯ ನಿರ್ವಹಿಸಬೇಕಾಗಿದೆ. ಡಿಸ್ಟಿಲರಿಗಳು ನೇರವಾಗಿ ರೈತರಿಂದ ಕನಿಷ್ಠ ಬೆಂಬಲ ದರ ನೀಡಿ ಮೆಕ್ಕೆಜೋಳ ಖರೀದಿಸಲು ಮುಂದೆ ಬಂದರೆ, ಜಿಲ್ಲಾಡಳಿತದ ಮೂಲಕ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಈಗಾಗಲೇ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ರಾಜ್ಯದ ಕಬ್ಬು ಬೆಳೆಗಾರರ, ಸಕ್ಕರೆ ಕಾರ್ಖಾನೆಗಳ ಹಾಗೂ ಡಿಸ್ಟಿಲರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿದ್ದೇನೆ. ಮೆಕ್ಕೆಜೋಳದ ನಾಫೆಡ್ ಪೂರ್ವ ನಿರ್ಧಾರಿತ ಖರೀದಿ ಬೆಲೆ ಕ್ವಿಂಟಾಲ್‌ಗೆ ರೂ.2,639 ಇದ್ದು, ಇದರಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.2,400 ಕನಿಷ್ಟ ಬೆಂಬಲ ಬೆಲೆ ಮೂಲಕ ರೈತರಿಗೆ ನೇರವಾಗಿ ಪಾವತಿಯಾಗಲಿದೆ. ಈ ಹಿನ್ನೆಲೆಯಲ್ಲಿ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಗೆ ಡಿಸ್ಟಿಲರಿಗಳಿಗೆ ಅವಕಾಶ ನೀಡಲಾಗಿದ್ದು, ಈ ಕುರಿತು ಡಿಸ್ಟಿಲರಿಗಳು ನಿರ್ಧಾರ ಕೈಗೊಳ್ಳಬೇಕಾಗಿದೆ.

ರಾಜ್ಯದಲ್ಲಿ ಧಾನ್ಯ ಮಾತ್ರ ಆಧಾರಿತ ಮೂರು ಡಿಸ್ಟಿಲರಿಗಳಿಗೆ ಒಟ್ಟು 94,400 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 2,48,461 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆ ಇದೆ. 7 ಡ್ಯುಯಲ್ ಫೀಡ್‌ಸ್ಟಾಕ್ ಡಿಸ್ಟಿಲರಿಗಳಿಗೆ 1,90,751 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 5,02,056 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆಯಿದೆ. ನಿಯಮಾನುಸಾರ ಡಿಸ್ಟಿಲರಿಗಳು ರೈತರಿಂದ ಮೆಕ್ಕೆಜೋಳ ಖರೀದಿಸಿ, ರೈತರ ಹಿತ ಕಾಯುವ ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಹೇಳಿದರು.

ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಮೆಕ್ಕೆ ಜೋಳ ಖರೀದಿ ಮಾಡಲು ಸರ್ಕಾರ ಮುಂದಾಗಿದೆ. ಕೆಎಂಎಫ್ ಮೂಲಕ 50 ಸಾವಿರ ಮೆಟ್ರಿಕ್ ಟನ್ ಖರೀದಿಗೆ ನಿರ್ಧಾರಿಸಿದೆ. ಡಿ.1ರಿಂದ ರಾಜ್ಯದ ಐದು ಕಡೆ ಖರೀದಿ ಕೇಂದ್ರ ಓಪನ್ ಆಗಲಿದೆ.

KMF ರೈತರಿಂದಲೇ ನೇರವಾಗಿ ಮೆಕ್ಕೆಜೋಳ ಖರೀದಿ ಮಾಡಲಿದೆ.

ತಲಾ ಒಬ್ಬ ರೈತನಿಂದ ಗರಿಷ್ಟ 25 ಟನ್ ಮೆಕ್ಕೆಜೋಳ ಖರೀದಿ ಮಾಡಲಿದೆ. ಪ್ರತಿ ಟನ್ 2,400 ರೂ. ದರ ನಿಗಧಿ ಮಾಡಿದ್ದು MSP ದರದಲ್ಲಿ ಮೆಕ್ಕೆ ಜೋಳ ಖರೀದಿಗೆ ಮುಂದಾಗಿದೆ. ಗುಣಮಟ್ಟದ ಹಿನ್ನೆಲೆ ದರ ವ್ಯತ್ಯಾಸ ಕಂಡುಬಂದಿದೆ. ಮೆಕ್ಕೆಜೋಳ ತೇವಾಂಶ 14 ಡಿಗ್ರಿ ಇದ್ರೆ ಖರೀದಿ ಮಾಡಲಾಗುತ್ತೆ.

ಮೆಕ್ಕೆ ಜೋಳ ಮಾರಾಟ ಮಾಡುವ ರೈತರು ಮೊದಲು ನೊಂದಣಿ ಮಾಡಿಕೊಳ್ಳಬೇಕು.. ಕೃಷಿ ಇಲಾಖೆ, ಇ ಗರ್ವನೆನ್ಸ್, NIC ಮೂಲಕ ರೈತರು ನೋಂದಣಿ ಮಾಡಿಕೊಳ್ಳಬೇಕು. ರೈತರಿಗೆ ಖರೀದಿ ಕುರಿತು ಎಸ್ ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತೆ. ಆಗ ಖರೀದಿ ಕೇಂದ್ರದಲ್ಲಿ ಮೆಕ್ಕೆಜೋಳ ಮಾರಾಟ ಮಾಡಬೇಕು.

ಎಲ್ಲೆಲ್ಲಿ ಖರೀದಿ ಕೇಂದ್ರ..!?

1) ಗುಬ್ಬಿ

2) ಶಿಕಾರಿಪುರ

3) ಧಾರವಾಡ

4) ಹಾಸನ

5) ಬೆಂಗಳೂರಿನ ರಾಜನಕುಂಟೆ

ಸರ್ಕಾರ ಸೂಚನೆ ಹಿನ್ನೆಲೆ ಕೆಎಂಎಫ್ ನಿಂದ ಮೆಕ್ಕೆ ಜೋಳ ಖರೀದಿ ಮಾಡಲಾಗುತ್ತೆ. ಟೆಂಡರ್ ಮೂಲಕ 2,150 - 2250 ರೂ. ದರದಲ್ಲಿ ಖರೀದಿ ಮಾಡ್ತಿದ್ವಿ.. ಇದೀಗ ಸರ್ಕಾರ ಸೂಚನೆ ಹಿನ್ನೆಲೆ.. ರೈತರಿಂದಲೇ ನೇರವಾಗಿ 2400 ರೂ. ಖರೀದಿ ಮಾಡಲಿದ್ದೇವೆ ಎಂದು KMF MD ಶಿವಸ್ವಾಮಿ ಹೇಳಿಕೆ ನೀಡಿದರು.

]]>
Sat, 29 Nov 2025 08:20:49 +0530 shivuagrico
ಸಣ್ಣ, ಅತೀ ಸಣ್ಣ ರೈತರಿಗೆ ಗುಡ್ ನ್ಯೂಸ್: ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ https://krushirushi.in/grow-horticulture-crops-under-the-Employment-Guarantee-Scheme. https://krushirushi.in/grow-horticulture-crops-under-the-Employment-Guarantee-Scheme. ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಇಚ್ಛಿಸುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಣ್ಣ, ಅತೀ ಸಣ್ಣ, ಪರಿಶಿಷ್ಟ ಜಾತಿ, ಹಾಗೂ ಪರಿಶಿಷ್ಟ ಪಂಗಡದ ಅರ್ಹ ರೈತರು ಅರ್ಜಿ ಸಲ್ಲಿಸಬಹುದು.

ಈ ಯೋಜನೆಯಡಿಯಲ್ಲಿ ತೋಟಗಾರಿಕೆ ಬೆಳೆಗಳಾದ ವೀಳ್ಯದೆಲೆ, ತೆಂಗು, ಮಾವು, ಸಪೋಟ, ಸೀಬೆ, ಅಂಗಾಂಶ ಬಾಳೆ, ಪಪ್ಪಾಯ, ಕರಿಬೇವು, ಕಾಳುಮೆಣಸು, ಕೋಕೋ, ನೇರಳೆ, ಸೀತಾಫಲ, ಡ್ರಾಗನ್ ಪ್ರೋಟ್ಸ್, ಮಲ್ಲಿಗೆ, ಬೆಣ್ಣೆ, ಹಣ್ಣು, ಹಲಸು, ಗುಲಾಬಿ ಇತ್ಯಾದಿ ತೋಟಗಾರಿಕೆ ಬೆಳೆಗಳಿಗೆ ಅರ್ಜಿ ಸಲ್ಲಿಬಹುದು.

ಅರ್ಜಿ ಸಲ್ಲಿಸಲು ಡಿಸೆಂಬರ್ 30 ರೊಳಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ) ಹರಿಹರ ಕಛೇರಿಗೆ ಅಥವಾ ಆಯಾ ಗ್ರಾಮ ಪಂಚಾಯತಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ದಾವಣಗೆರೆ ಜಿ.ಪಂ) ತಿಳಿಸಿದ್ದಾರೆ.

]]>
Fri, 28 Nov 2025 15:24:00 +0530 shivuagrico
ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸ್ಪ್ರಿಂಕ್ಲರ್ಗೆ ಶೇ.90ರಷ್ಟು ಸಹಾಯಧನ ಪಡೆಯಲು ಅರ್ಜಿ ಆಹ್ವಾನ https://krushirushi.in/Applications-Invited-for-90-Subsidy-on-Sprinkler-Irrigation-Systems https://krushirushi.in/Applications-Invited-for-90-Subsidy-on-Sprinkler-Irrigation-Systems 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್ಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ.

ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ಪುಸ್ತಕ ಪ್ರತಿ ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ.

ತುಂತುರು ನೀರಾವರಿ ಉಪಕರಣಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಡು ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿ ಪಡೆಯಬೇಕೆಂದು ಕೋರಿದೆ.

ಈ ಸೌಲಭ್ಯವನ್ನು ಮತ್ತೊಮ್ಮೆ ನೀಡಲಾಗುತ್ತಿದ್ದು, ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ರೈತ ಬಾಂಧವರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸೋಮವಾರಪೇಟೆ ಸಹಾಯಕ ಕೃಷಿ ನಿರ್ದೇಶಕರಾದ ಕೆ.ಪಿ.ವೀರಣ್ಣ ಅವರು ಕೋರಿದ್ದಾರೆ.

]]>
Fri, 28 Nov 2025 11:10:54 +0530 shivuagrico
Input subsidy for crop loss&ರಾಜ್ಯದ 27 ಜಿಲ್ಲೆಗಳ 14.24 ಲಕ್ಷ ರೈತರಿಗೆ ರಾಜ್ಯ ಸರ್ಕಾರ ₹1,033.60 ಕೋಟಿ ಬೆಳೆಹಾನಿ ಪರಿಹಾರ,ನಿಮಗೇಷ್ಟು ಜಮಾ ಆಗಿದೆ ಹೀಗೆ ಚೆಕ್ ಮಾಡಿ https://krushirushi.in/Input-subsidy-for-crop-loss-2296 https://krushirushi.in/Input-subsidy-for-crop-loss-2296

Input subsidy for crop loss-ರಾಜ್ಯದ 27 ಜಿಲ್ಲೆಗಳ 14.24 ಲಕ್ಷ ರೈತರಿಗೆ ರಾಜ್ಯ ಸರ್ಕಾರ ₹1,033.60 ಕೋಟಿ ಬೆಳೆಹಾನಿ ಪರಿಹಾರ

ಮುಂಗಾರು ಹಂಗಾಮಿನಲ್ಲಾದ ಅತಿವೃಷ್ಟಿಯಿಂದ ಬೆಳೆನಷ್ಟ ಅನುಭವಿಸಿದ 27 ಜಿಲ್ಲೆಗಳ 14.24 ಲಕ್ಷ ರೈತರಿಗೆ ರಾಜ್ಯ ಸರ್ಕಾರ ₹1,033.60 ಕೋಟಿ ಪರಿಹಾರ ನೀಡಿದ್ದು, ಎಲ್ಲ ರೈತರ ಬ್ಯಾಂಕ್‌ ಖಾತೆಗಳಿಗೆ 24 ಗಂಟೆಗಳಲ್ಲಿ ಈ ಮೊತ್ತ ಜಮೆಯಾಗಲಿದೆ.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ರಾಜ್ಯ ವಿಪತ್ತು ನಿರ್ವಹಣಾ ನಿಧಿಯ (ಎಸ್‌ಡಿಆರ್‌ಎಫ್‌) ₹1,218 ಕೋಟಿ ಮೊತ್ತದ ಹೊರತಾಗಿ ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್‌ಗೆ ₹8,500 ಹೆಚ್ಚುವರಿ ಪರಿಹಾರ ಘೋಷಿಸಿದೆ. ಈ ವಿಶೇಷ ಪ್ಯಾಕೇಜ್‌ ವಿತರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.

ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಂಗಾರಿನಲ್ಲಿ 82.56 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಜೂನ್‌ನಿಂದ ಸೆಪ್ಟಂಬರ್‌ ಅವಧಿಯಲ್ಲಿನ ಅತಿವೃಷ್ಟಿಯಿಂದ 14.58 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿತ್ತು. ₹10,748 ಕೋಟಿ ಹಾನಿ ಅಂದಾಜಿಸಲಾಗಿತ್ತು. ಮುಖ್ಯವಾಗಿ ತೊಗರಿ 5.36 ಲಕ್ಷ ಹೆಕ್ಟೇರ್‌, ಹೆಸರು ಕಾಳು 2.63 ಲಕ್ಷ ಹೆಕ್ಟೇರ್‌, ಹತ್ತಿ 2.68 ಲಕ್ಷ ಹೆಕ್ಟೇರ್‌ ಹಾಗೂ ಮೆಕ್ಕೆಜೋಳ 1.21 ಲಕ್ಷ ಹೆಕ್ಟೇರ್‌ ಹಾನಿಯಾಗಿರುವುದು ಜಂಟಿ ಸಮೀಕ್ಷೆಯಲ್ಲಿ ದೃಢಪಟ್ಟಿತ್ತು’ ಎಂದರು.

ಎಸ್‌ಡಿಆರ್‌ಎಫ್‌ ಮಾನದಂಡಗಳ ಪ್ರಕಾರ ಗರಿಷ್ಠ ಎರಡು ಹೆಕ್ಟೇರ್‌ಗೆ ಸೀಮಿತವಾಗಿ 14.24 ಲಕ್ಷ ರೈತರಿಗೆ ₹1,218.03 ಕೋಟಿ ಪರಿಹಾರ ವಿತರಿಸಲಾಗಿದೆ. ಈಗ ನೀಡುತ್ತಿರುವ ಹೆಚ್ಚುವರಿ ಪರಿಹಾರ ₹1,033.60 ಕೋಟಿ ಸೇರಿ ಒಟ್ಟು ₹2,251.63 ಕೋಟಿ  ನೀಡಿದಂತಾಗುತ್ತದೆ.

ನಿಮಗೇಷ್ಟು ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Fri, 28 Nov 2025 07:23:23 +0530 shivuagrico
ಜಮೀನು "ಪೋಡಿ" ಎಂದರೇನು? ಏಕೆ ಮಾಡಿಸಬೇಕು, ಅನುಕೂಲಗಳೇನು? ಇಲ್ಲಿದೆ ನೋಡಿ ಮಾಹಿತಿ https://krushirushi.in/What-is-Land-Podi-Why-is-it-done-and-what-are-its-benefits https://krushirushi.in/What-is-Land-Podi-Why-is-it-done-and-what-are-its-benefits ರಾಜ್ಯದ ಗ್ರಾಮೀಣ ಭಾಗಗಳಲ್ಲಿ ವರ್ಷಗಳಿಂದ ಬಾಕಿ ಉಳಿದಿರುವ ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ದೊಡ್ಡ ಮಟ್ಟದ 'ಪೋಡಿ ಅಭಿಯಾನ' ಆರಂಭಿಸಿದೆ. ರಾಜ್ಯದಲ್ಲಿ ಲಕ್ಷಾಂತರ ರೈತರಿಗೆ ಸರ್ಕಾರದಿಂದ ಮಂಜೂರಾದ ಜಮೀನುಗಳಲ್ಲೂ ಹಲವಾರು ಪ್ರಕರಣಗಳು ಇನ್ನೂ ಪೋಡಿ ದುರಸ್ತಿ ಆಗದೆ ಬಾಕಿ ಉಳಿದಿವೆ.

ಈ ಹಿಂದೆ ಸರ್ಕಾರದ ಅವಧಿಯಲ್ಲೂ ಅನೇಕ ಚರ್ಚೆಗಳು ನಡೆದಿದ್ದರೂ ಸರಿಯಾದ ಪರಿಹಾರ ದೊರೆತಿರಲಿಲ್ಲ. ಸುಮಾರು 10 ಲಕ್ಷ ರೈತರಿಗೆ ಮಂಜೂರಾದ ಸರ್ಕಾರಿ ಜಮೀನುಗಳ ಪೋಡಿ ದುರಸ್ತಿ ಆಗದೆ ಉಳಿದಿರುವುದರಿಂದ, ರೈತರಿಗೆ ಜಮೀನು ಮಾಲೀಕತ್ವದ ಸಂಪೂರ್ಣ ಹಕ್ಕು ಸಿಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ರಾಜ್ಯ ಸರ್ಕಾರ 2024ರ ಸೆಪ್ಟೆಂಬರ್ ತಿಂಗಳಿಂದ ಪೋಡಿ ಅಭಿಯಾನಕ್ಕೆ ಚಾಲನೆ ನೀಡಿದೆ.

ಪೋಡಿ ಸಮಸ್ಯೆಯ ಪ್ರಮುಖ ಕಾರಣಗಳು

ಅಧಿಕಾರಿಗಳು ದಶಕಗಳ ಹಿಂದೆ ನೂರು ಎಕರೆ ಜಮೀನಿದ್ದರೆ ಅದಕ್ಕಿಂತ ಹೆಚ್ಚು ವಿಸ್ತೀರ್ಣ ಮಂಜೂರು ಮಾಡಿದ ಪ್ರಕರಣಗಳು.

ಕೆಲವು ಸಂದರ್ಭಗಳಲ್ಲಿ ಜಮೀನು ಬಳಕೆ ಮಾಡದವರಿಗೂ ಮಂಜೂರು ಮಾಡಿರುವುದು.

ಕೆಲವು ರೈತರ ಹೆಸರು ಆರ್‌ಟಿಸಿಯಲ್ಲಿ ಇದ್ದರೂ, ನಿಖರ ದಾಖಲೆಗಳ ಕೊರತೆ.

ಕೆಲವು ರೈತರು ಅರ್ಜಿ ಸಲ್ಲಿಸಿದ್ದರೂ ಮಂಜೂರು ದಾಖಲೆಗಳಿಲ್ಲ.

ಈ ಕಾರಣಗಳಿಂದ ರೈತರು ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರೂ, ಆ ಭೂಮಿಯಿಂದ ಯಾವುದೇ ಸರಕಾರಿ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿರಲಿಲ್ಲ.

ಪೋಡಿ ಎಂದರೆ ಏನು?

ಪೋಡಿ ಎಂದರೆ ಜಮೀನಿನ ದುರಸ್ತಿ ಭಾಗ ಮಾಡುವುದು ಎಂದರ್ಥ. ಒಂದು ಸರ್ವೆ ನಂಬರ್‌ನಲ್ಲಿ ಹಲವಾರು ಜನರ ಹೆಸರಿದ್ದರೆ, ಅವರ ಹೆಸರನ್ನು ಪ್ರತ್ಯೇಕವಾಗಿ ಗುರುತಿಸಿ ದಾಖಲೆ ತಯಾರು ಮಾಡುವ ಪ್ರಕ್ರಿಯೆ.

ಪೋಡಿಗೆ ನಾಲ್ಕು ವಿಧಗಳಿವೆ:

ದರ್ಖಾಸ್ತು ಪೋಡಿ

ಅಲಿನೇಷನ್ ಪೋಡಿ

ತತ್ಕಾಲ ಪೋಡಿ

ಮ್ಯೂಟೇಷನ್ ಪೋಡಿ

ಪೋಡಿ ಏಕೆ ಮಾಡಿಸಬೇಕು?

ಒಂದು ಸರ್ವೆ ನಂಬರ್‌ನಲ್ಲಿ ಹಲವು ಹಿಸ್ಸಾ ಸಂಖ್ಯೆಗಳಿದ್ದರೂ, ಭೂ ಮಾಲೀಕತ್ವ ಒಂದೇ ಪಹಣಿಯಲ್ಲಿ ಇದ್ದರೆ ರೈತರಿಗೆ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ.

ಪೋಡಿ ಮಾಡಿದರೆ ಪ್ರತಿ ರೈತನಿಗೆ ಪ್ರತ್ಯೇಕ ಹಿಸ್ಸಾ ಸಂಖ್ಯೆ, ತಾತ್ಕಾಲಿಕ ಪೋಡಿ ನಂಬರ್ ಮತ್ತು ಏಕ ಮಾಲೀಕತ್ವದ ಪಹಣಿ ದೊರೆಯುತ್ತದೆ.

ಪೋಡಿಗೆ ಬೇಕಾಗಿರುವ ದಾಖಲೆಗಳು

ಜಮೀನು ಮಾಲೀಕನ ಆಧಾರ್ ಕಾರ್ಡ್

ಪಹಣಿ ಪ್ರತಿಗಳು

ಹೆಚ್ಚಿನ ಮಾಹಿತಿಗಾಗಿ ತಹಶಿಲ್ದಾರ್ ಕಚೇರಿ ಅಥವಾ ನಾಡ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕು. ಪೋಡಿಯಿಂದ ಹೆಸರು ಬದಲಾಗುವುದಿಲ್ಲ; ಕೇವಲ ಗಡಿ ಗುರುತು ಮಾಡಲಾಗುತ್ತದೆ.

ಪೋಡಿಯಿಂದಾಗುವ ಪ್ರಮುಖ ಪ್ರಯೋಜನಗಳು

ಏಕ ಮಾಲೀಕತ್ವದಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಮತ್ತು ಬೆಳೆ ಸಾಲ ಸಿಗುತ್ತದೆ.

ಭೂಮಿ ಮಾಲೀಕತ್ವ ಖಚಿತವಾಗುವುದರಿಂದ ವಿವಾದಗಳು ತಪ್ಪುತ್ತವೆ.

ಬೆಳೆ ವಿಮೆ ಪಡೆಯಲು ಸುಲಭ.

ಸರ್ಕಾರದ ಎಲ್ಲ ಸೌಲಭ್ಯಗಳು ಹಾಗೂ ಯೋಜನೆಗಳ ಪ್ರಯೋಜನ ಪಡೆಯಲು ಅನುಕೂಲ.

ಕೃಷಿ ಭೂಮಿ ಖರೀದಿ-ಮಾರಾಟಕ್ಕೆ ಪೋಡಿ ಕಡ್ಡಾಯ.

ರಾಜ್ಯ ಸರ್ಕಾರದ ಈ ಹೊಸ ಪೋಡಿ ಅಭಿಯಾನದ ಮೂಲಕ ವರ್ಷಗಳಿಂದ ಬಾಕಿ ಉಳಿದ ಪ್ರಕರಣಗಳಿಗೆ ಶಾಶ್ವತ ಪರಿಹಾರ ದೊರಕುವ ನಿರೀಕ್ಷೆಯಿದೆ. ಇದರಿಂದ ರೈತರಿಗೆ ಸಂಪೂರ್ಣ ಮಾಲೀಕತ್ವ ದೊರೆಯುವ ಜೊತೆಗೆ ಕೃಷಿ ಸಂಬಂಧಿತ ಸೌಲಭ್ಯಗಳ ಲಾಭವೂ ಹೆಚ್ಚಲಿದೆ.

]]>
Tue, 25 Nov 2025 15:52:29 +0530 shivuagrico
ಕೇಂದ್ರ, ರಾಜ್ಯ ಸರ್ಕಾರ ವಿರುದ್ಧ ರೈತರ ಗುಡುಗು: ಖರೀದಿ ಕೇಂದ್ರ ತೆರೆಯಲು ಒತ್ತಾಯ https://krushirushi.in/State-Governments:-Demand-to-Open-More-Procurement-Centres https://krushirushi.in/State-Governments:-Demand-to-Open-More-Procurement-Centres ಹಾವೇರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆಯುವ ಮೆಕ್ಕೆಜೋಳವನ್ನು ಖರೀದಿಸಲು ಖರೀದಿ ಕೇಂದ್ರಗಳನ್ನು ತೆರೆಯಬೇಕು. ಪ್ರತಿ ಕ್ವಿಂಟಲ್‌ಗೆ ಕನಿಷ್ಠ ₹ 3,000 ನೀಡಬೇಕು' ಎಂದು ಒತ್ತಾಯಿಸಿ ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿರುವ ರೈತರು, ಬೇಡಿಕೆ ಈಡೇರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.

'ಪ್ರಸಕ್ತ ಸಾಲಿನಲ್ಲಿ ಮೆಕ್ಕೆಜೋಳದ ಬೆಲೆ ಹೆಚ್ಚಿನ ಪ್ರಮಾಣದಲ್ಲಿ ಕುಸಿದಿದ್ದು, ಮೆಕ್ಕೆಜೋಳ ಬೆಳೆದಿದ್ದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಶುಗಳ ಆಹಾರ, ಎಥನಾಲ್ ಹಾಗೂ ವಿವಿಧ ಉತ್ಪನ್ನಗಳ ತಯಾರಿಸಲು ಮೆಕ್ಕೆಜೋಳ ಬಳಸುತ್ತಿರುವ ಕಂಪನಿಗಳೇ ಬೆಲೆ ನಿಗದಿಯಲ್ಲಿ ಆಟವಾಡುತ್ತಿವೆ. ಇದರಿಂದ ಮೆಕ್ಕೆಜೋಳ ಬೆಳೆದವರಿಗೆ ಅನ್ಯಾಯವಾಗುತ್ತಿದೆ' ಎಂದು ರೈತರು ಆರೋಪಿಸುತ್ತಿದ್ದಾರೆ.

ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಹಾಗೂ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಲ್‌ಗೆ ₹3,000 ದರ ನಿಗದಿಪಡಿಸುವಂತೆ ಸರ್ಕಾರವನ್ನು ಒತ್ತಾಯಿಸಲು 'ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ'ಯ ಜಿಲ್ಲಾ ಘಟಕದಿಂದ ಅನಿರ್ದಿಷ್ಟಾವಧಿ ಧರಣಿಗೆ ಕರೆ ನೀಡಲಾಗಿದೆ.

ಬೃಹತ್ ಮೆರವಣಿಗೆ: ಧರಣಿಯ ಭಾಗವಾಗಿ ಹಾವೇರಿಯಲ್ಲಿ ರೈತರು ಬೃಹತ್ ಮೆರವಣಿಗೆ ನಡೆಸಿದರು. ಕಾಗಿನೆಲೆ ರಸ್ತೆಯಲ್ಲಿರುವ ಮುರುಘಾಮಠದಿಂದ ಆರಂಭವಾದ ಮೆರವಣಿಗೆ, ಹೊಸಮನಿ ಸಿದ್ದಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಯವರೆಗೂ ಸಾಗಿತು. ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಸಿದ್ದಪ್ಪ ವೃತ್ತದಲ್ಲಿ ಕೆಲ ನಿಮಿಷ ಬಹಿರಂಗ ಸಭೆ ನಡೆಸಿದ ರೈತರು, ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಹಸಿರು ಶಾಲುಗಳನ್ನು ಬೀಸಿದ ರೈತರು, ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಎಚ್ಚರಿಕೆ ರವಾನಿಸಿದರು. ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು ಸಾಗಿದ ರೈತರು, ಅಲ್ಲಿಯೇ ಬಹಿರಂಗ ಸಭೆ ಮುಂದುವರಿಸಿದರು.

'ಮೆಕ್ಕೆಜೋಳ ಖರೀದಿಸಲು ಎಫ್‌ಆರ್‌ಪಿ ಪ್ರಕಾರ ಕೇಂದ್ರ ಸರ್ಕಾರದಿಂದ ₹2,400 ನೀಡಬೇಕು. ರಾಜ್ಯ ಸರ್ಕಾರವು ತನ್ನ ಪಾಲಿನಿಂದ ₹ 600 ನೀಡಬೇಕು. ಮೆಕ್ಕೆಜೋಳ ಖರೀದಿಸಲು ಕೇಂದ್ರಗಳನ್ನು ತ್ವರಿತವಾಗಿ ಪ್ರಾರಂಭಿಸಬೇಕು' ಎಂದು ರೈತರು ಒತ್ತಾಯಿಸಿದರು.

'ಅತಿವೃಷ್ಟಿ ಮಳೆಯಿಂದ ಬೆಳೆ ಕಳೆದುಕೊಂಡ ರೈತರಿಗೆ ಪ್ರತಿ ಎಕರೆಗೆ ₹25,000 ಪರಿಹಾರ ನೀಡಬೇಕು. ವರದಾ ಹಾಗೂ ಬೇಡ್ತಿ ನದಿ ಜೋಡಣೆ ಮಾಡಬೇಕು. ಹೆಸ್ಕಾಂ ಕಂಪನಿಯವರು, ವಿದ್ಯುತ್ ಕಂಬ ಹಾಗೂ ತಂತಿಯನ್ನು ರೈತರೇ ಖರೀದಿಸುವಂತೆ ನಿಯಮ ಮಾಡಿದೆ. ಈ ನಿಯಮ ರದ್ದುಪಡಿಸಬೇಕು. ಹೆಸ್ಕಾಂ ಕಂಪನಿಯವರು ವಿಧಿಸುತ್ತಿರುವ ಶುಲ್ಕ ದುಬಾರಿಯಾಗಿದ್ದು, ಅದನ್ನು ಕೈ ಬಿಡಬೇಕು. ಬೆಳೆ ವಿಮೆಯಲ್ಲಾದ ತಾರತಮ್ಯ ಸರಿಪಡಿಸಬೇಕು' ಎಂದು ರೈತರು ಆಗ್ರಹಿಸಿದರು.

ಸ್ವಾಮೀಜಿಗಳು ಭಾಗಿ: ರೈತರ ಹೋರಾಟದಲ್ಲಿ ಪಾಲ್ಗೊಂಡಿದ್ದ ಜಿಲ್ಲೆಯ ವಿವಿಧ ಮಠಗಳ ಸ್ವಾಮೀಜಿಗಳು, 'ಜಗತ್ತಿಗೆ ಅನ್ನ ಹಾಕುತ್ತಿರುವ ರೈತರ ಬೇಡಿಕೆಗಳನ್ನು ಸರ್ಕಾರಗಳು ತ್ವರಿತವಾಗಿ ಈಡೇರಿಸಬೇಕು' ಎಂದು ಒತ್ತಾಯಿಸಿದರು.

ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ, ಅಕ್ಕಿಆಲೂರಿನ ಶಿವಬಸವ ಸ್ವಾಮೀಜಿ, ಮಣಕವಾಡದ ಮೃತ್ಯುಂಜಯ ಸ್ವಾಮೀಜಿ, ಗುಬ್ಬಿ ಅಜ್ಜನವರು, ಅಗಡಿಯ ಗುರುಲಿಂಗ ಸ್ವಾಮೀಜಿ, ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ, ಸವಣೂರಿನ ಚನ್ನಬಸವ ಸ್ವಾಮೀಜಿ, ಕರ್ಜಗಿಯ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಅಡವಿ ಸೋಮಾಪುರದ ಕುಮಾರ ಸ್ವಾಮೀಜಿ, ಕಲ್ಮಠದ ಗುರುಸಿದ್ಧ ಸ್ವಾಮೀಜಿ ಪ್ರತಿಭಟನೆಯಲ್ಲಿದ್ದರು.

'ಬೇಡಿಕೆ ಈಡೇರುವವರೆಗೂ ಧರಣಿ'

'ಹಾವೇರಿ ಜಿಲ್ಲೆ ಮಾತ್ರವಲ್ಲದೇ ದೇಶದಾದ್ಯಂತ ರೈತರು ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಎಲ್ಲ ರೈತರ ಪರವಾಗಿ ಈ ಧರಣಿ ಆರಂಭಿಸಲಾಗಿದೆ. ಬೇಡಿಕೆ ಈಡೇರಿಸುವ ಬಗ್ಗೆ ಸರ್ಕಾರ ಘೋಷಣೆ ಮಾಡುವವರೆಗೂ ನಮ್ಮ ಧರಣಿ ಮುಂದುವರಿಯಲಿದೆ' ಎಂದು 'ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ'ಯ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಹೇಳಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಅವರು 'ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿ ಬೆಳೆ ಹಾನಿ ಅನುಭವಿಸುತ್ತಿರುವ ರೈತರು ಆರ್ಥಿಕವಾಗಿ ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಬೆಳೆಯೂ ಹಾಳಾಗಿದ್ದು ಇಳುವರಿಯೂ ಕಡಿಮೆಯಾಗಿದೆ. ಅಲ್ಪಸ್ವಲ್ಪ ಮೆಕ್ಕೆಜೋಳಕ್ಕೆ ಸರಿಯಾದ ಬೆಲೆಯಿಲ್ಲ. ಇದರಿಂದ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ' ಎಂದು ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ 'ಮೆಕ್ಕೆಜೋಳ ಖರೀದಿಗೆ ಬೆಂಬಲ ಬೆಲೆ ಕೇಂದ್ರ ಆರಂಭಿಸುವ ಬಗ್ಗೆ ಹೇಳುತ್ತಿರುವ ಸರ್ಕಾರಗಳ ಭರವಸೆ ಪ್ರಕಟಣೆಗೆ ಮಾತ್ರ ಸೀಮಿತಲಾಗಿದೆ. ಹಾವೇರಿಯಲ್ಲಿ ರೈತರು ದೊಡ್ಡ ಮಟ್ಟದ ಹೋರಾಟ ಆರಂಭಿಸಿದ್ದು ಸೋಮವಾರ ರಾತ್ರಿಯವರೆಗೂ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಮಂಗಳವಾರವೂ ನಮ್ಮ ಧರಣಿ ಮುಂದುವರಿಯಲಿದೆ' ಎಂದರು.

]]>
Tue, 25 Nov 2025 10:30:16 +0530 shivuagrico
ಕೃಷಿ ಭೂಮಿಯನ್ನು ಕೃಷಿಯೇತರ ಬಳಕೆಗೆ 'ಭೂ ಪರಿವರ್ತನೆ' ಮಾಡಲು ಅಗತ್ಯವಾದ ದಾಖಲೆಗಳ ಪಟ್ಟಿ ಇಲ್ಲಿದೆ https://krushirushi.in/documents-required-for-converting-agricultural-land-for-non-agricultural https://krushirushi.in/documents-required-for-converting-agricultural-land-for-non-agricultural ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತಿಸುವುದಕ್ಕೆ ಸರ್ಕಾರ ಅವಕಾಶ ನೀಡಿದೆ. ಆದರೇ ಈ ಉದ್ದೇಶಗಳಿಗಾಗಿ ಕೆಲವು ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ಈ ಸಂಬಂಧ ಕಂದಾಯ ಇಲಾಖೆಯ ಭೂಮಂಜೂರಾತಿ ವಿಭಾಗದ ಸರ್ಕಾರದ ಅಧೀನ ಕಾರ್ಯದರ್ಶಿಯವರು ದಿನಾಂಕ 20-02-2019ರಲ್ಲೇ ಹೊರಡಿಸಿರುವಂತ ನಡವಳಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ

ಅದರಲ್ಲಿ

ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95(2) ರಡಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಭೋಗದಾರನು ಅಂತಹ ಜಮೀನನ್ನು ಅಥವಾ ಅದರ ಯಾವುದೇ ಭಾಗವನ್ನು ಕೃಷಿಯೇತರ ಉದ್ದೇಶಕ್ಕಾಗಿ ಪರಿವರ್ತಿಸಲು ಇಚ್ಚಿಸಿದರೆ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ(1)ರ ಸರ್ಕಾರದ ಸುತ್ತೋಲೆ ದಿನಾಂಕ: 17-10-2008 ರನ್ವಯ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961 (ಕೆಟಿಪಿಪಿ) ಅನ್ವಯ ಕೃಷಿ ಜಮೀನನ್ನು ಭೂ ಪರಿವರ್ತಿಸಲಾದ ಯಾವುದೇ ಕಾನೂನಿನ ಉಪಬಂಧಗಳನ್ನು ಉಲ್ಲಂಘಿಸುತ್ತಿಲ್ಲವೆಂಬುದನ್ನು ಹಾಗೂ ಭೂ ಉಪಯೋಗ ಬದಲಾವಣೆಗೆ ಸಂಬಂಧಿಸಿದ ಓಡಿಪಿ ಮತ್ತು ಸಿಡಿಪಿ ಅನ್ವಯ ಇದೆಯೇ ಎನ್ನುವ ಕುರಿತು ದೃಢೀಕರಿಸಿಕೊಳ್ಳುವ ಸಲುವಾಗಿ ಬಿಡಿಎ/ ಬಿಎಂಆರ್‌ಡಿಎ | ಸ್ಥಳೀಯ ಯೋಜನಾ ಪ್ರಾಧಿಕಾರಗಳ ಎನ್‌ಓಸಿಯನ್ನು ಪಡೆದ ನಂತರವೇ ಭೂ ಪರಿವರ್ತನೆ ಆದೇಶ ನೀಡಲು ಕ್ರಮವಹಿಸಲಾಗುತ್ತಿದೆ.

ಮುಂದುವರೆದು, ಅರ್ಜಿದಾರರು ಭೂ ಪರಿವರ್ತನೆಗೆ ಕೋರಿರುವ ಜಮೀನು ಪಿ.ಟಿ.ಸಿ.ಎಲ್. ಕಾಯ್ದೆಗೆ ಒಳಪಟ್ಟಿಲ್ಲವೆಂದು, ಕರ್ನಾಟಕ ಭೂ ಸುಧಾರಣೆ ಕಾಯ್ದೆ, 1961ರ ಕಲಂ 79ಎ ಮತ್ತು 79ಬಿ ಒಳಪಟ್ಟಿಲ್ಲವೆಂದು, ಭೂ ಸ್ವಾಧೀನತೆಗೆ ಒಳಪಟ್ಟಿಲ್ಲ ಎಂಬ ಬಗ್ಗೆ ಹಾಗೂ ಇತರ ಕೆಲವು ನಿರಾಕ್ಷೇಪಣಾ ಪತ್ರಗಳನ್ನು ವಿವಿಧ ಪ್ರಾಧಿಕಾರದಿಂದ ಮುಂಚಿತವಾಗಿ ಪಡೆದು ಭೂ ಪರಿವರ್ತನೆಗೆ ಅರ್ಜಿಯೊಂದಿಗೆ ಸಲ್ಲಿಸಬೇಕಾಗಿದ್ದು, ಅರ್ಜಿದಾರರಿಗೆ ಸಾಕಷ್ಟು ಸಮಯ ಮತ್ತು ಹಣದ ಹೊರೆಯಾಗುತ್ತಿದೆ.

ದಿನಾಂಕ: 02-02-201809 ದಿನಾಂಕ:01/03/2018ರಿಂದ ಭೂ ಪರಿವರ್ತನಾ ಕೋರಿಕೆಗಳನ್ನು ಭೂ ಪರಿವರ್ತನಾ ತಂತ್ರಾಂಶದ ಮುಖಾಂತರವೇ ನಿರ್ವಹಿಸತಕ್ಕದೆಂದು ಹಾಗೂ ಭೂ ಪರಿವರ್ತನೆಯ ಕೋರಿಕೆಗಳ ಆದೇಶ | ನಿರ್ಧಾರಗಳನ್ನು ಜಿಲ್ಲಾಧಿಕಾರಿಗಳ ಡಿಜಿಟಲ್ ಸಹಿ ಕಾರ್ಡಿನ ಮೂಲಕವೇ ಹೊರಡಿಸತಕ್ಕದೆಂದು ತಿಳಿಸಲಾಗಿದೆ.

ಮುಂದುವರೆದು. ಈ ವಿಷಯದಲ್ಲಿ ಆಗಾಗ್ಗೆ ಸರ್ಕಾರದಿಂದ ಸುತ್ತೋಲೆಗಳ ಮೂಲಕ ಕಾಲಕಾಲಕ್ಕೆ ಹಲವು ನಿರ್ದೇಶನಗಳನ್ನು ನೀಡಲಾಗಿದೆ. ಕೈಗಾರಿಕೋದ್ಯಮ ಹಾಗೂ ಸೌರ ವಿದ್ಯುತ್‌ ಮುಂತಾದ ಯೋಜನೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಭೂ ಸುಧಾರಣಾ ಕಾಯ್ದೆ, 1961ರ ಕಲಂ 109ಗೆ ತಿದ್ದುಪಡಿ ತರಲಾಗಿದ್ದು, ಭೂ ಪರಿವರ್ತನೆಯ ವಿಧಾನವನ್ನು ಸಾಕಷ್ಟು ಸರಳೀಕರಣಗೊಳಿಸಲಾಗಿದೆ. ಪ್ರವಾಸೋದ್ಯಮ. ವಸತಿ ಸೌಕರ್ಯ ಮುಂತಾದ ಮೂಲಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ಭೂ ಪರಿವರ್ತನಾ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಿಸುವುದು ಅವಶ್ಯವಾಗಿರುತ್ತದೆ.

ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತನೆಯ ಕೋರಿಕೆಗಳನ್ನು ಆನ್‌ಲೈನ್ ಮುಖಾಂತರ ಪಡೆದು ಹಾಗೂ ತಂತ್ರಾಂಶದ ಮೂಲಕ ನಿರ್ವಹಿಸಲು ಕ್ರಮವಹಿಸಲಾಗಿದೆ. ತಂತ್ರಾಂಶದ ಮೂಲಕ ಭೂ ಪರಿವರ್ತನೆಯ ಕೋರಿಕೆಗಳನ್ನು ನಿರ್ವಹಿಸಲು ಸೌಲಭ್ಯಗಳನ್ನು ಕಲ್ಪಿಸಲಾಗಿದ್ದರೂ ಸಹ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಮಾನ್ಯುಯಲ್ ವಿಧಾನದಲ್ಲಿಯೇ ಅರ್ಜಿ ಸಲ್ಲಿಸುತ್ತಿರುವುದನ್ನು ಗಮನಿಸಿದ್ದು, ಈ ಪ್ರಕ್ರಿಯೆಯಲ್ಲಿನ ಸಂಭಾವ್ಯ ವಿಳಂಬವನ್ನು ತಪ್ಪಿಸಿ, ಮತ್ತಷ್ಟು ಪಾರದರ್ಶಕತೆಯನ್ನು ತರುವ ದೃಷ್ಟಿಯಿಂದ ಕಾಲಮಿತಿಯೊಳಗೆ ಭೂ ಪರಿವರ್ತನೆ ಆದೇಶ ನೀಡುವುದನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಈ ಪ್ರಕ್ರಿಯೆಯನ್ನು ಇನ್ನಷ್ಟು ಸರಳಗೊಳಿಸುವುದು ಅವಶ್ಯವಾಗಿರುತ್ತದೆಂದು ಪ್ರಸ್ತಾಪಿಸಲಾಗಿದೆ.

ಭೂ ಪರಿವರ್ತನೆ ಪ್ರಕ್ರಿಯೆ ಸರಳೀಕರಣ ಕುರಿತಂತೆ ಮೊದಲ ಹಂತದಲ್ಲಿ ಅರ್ಜಿದಾರರು ನಾಡ ಕಚೇರಿ, ತಾಲ್ಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಆನ್ ಲೈನ್ ಮೂಲಕ ಜಿಲ್ಲಾಧಿಕಾರಿಗಳಿಗೆ ಯಾವುದೇ ನಿರಾಕ್ಷೇಪಣಾ ಪತ್ರಗಳಿಲ್ಲದೆ ಅರ್ಜಿದಾರರು ಪ್ರಮಾಣ ಪತ್ರ ಮತ್ತು ಕನಿಷ್ಠ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದ ಕೂಡಲೇ ಇತರೆ ಇಲಾಖೆಗಳು ಪ್ರಾಧಿಕಾರಗಳ ಅಭಿಪ್ರಾಯಕ್ಕಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಏಕಕಾಲಕ್ಕೆ ಕಳುಹಿಸುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಏಕಕಾಲಕ್ಕೆ ಕಳುಹಿಸಿರುವುದರಿಂದ ಅರ್ಜಿದಾರರು ವಿವಿಧ ಇಲಾಖೆಗಳಿಗೆ ಮತ್ತು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದು ಇದರ ಉದ್ದೇಶವಾಗಿದೆ. ಅರ್ಜಿದಾರರು ಸಲ್ಲಿಸಬೇಕಾದ ಕನಿಷ್ಠ ದಾಖಲೆಗಳನ್ನು ಅಂದರೆ (1) ಚಾಲ್ತಿ ವರ್ಷದ ಪಹಣಿ, (2) ಹಕ್ಕು ಬದಲಾವಣೆ ದಾಖಲಾತಿ ( ಮ್ಯೂಟೇಷನ್ ಪ್ರತಿ). (3) 11-ಇ ನಕ್ಷೆ( ಒಂದು ಸರ್ವೆ ನಂಬರಿನಲ್ಲಿ ಭಾಗಶಃ ಭೂ ಪರಿವರ್ತನೆಗೆ ವಿನಂತಿಸಿದ ಸಂದರ್ಭದಲ್ಲಿ ಮಾತ್ರ 11-ಇ ನಕ್ಷೆಯನ್ನು ಹಾಜರುಪಡಿಸಬೇಕು. (4) ಅಫಿಡವಿಟ್. ಇವುಗಳನ್ನು ಸಲ್ಲಿಸಬೇಕಾಗುತ್ತದೆ.

ಮುಂದುವರೆದು ಭೂ ಪರಿವರ್ತನೆಗೆ ಕೋರಿಕೆಗಳನ್ನು ಅಭಿಪ್ರಾಯಕ್ಕಾಗಿ ಆನ್‌ಲೈನ್‌ ಮುಖಾಂತರ ಇಲಾಖೆಗಳಿಗೆ ಪ್ರಾಧಿಕಾರಿಗಳಿಗೆ ಕಳುಹಿಸಿದೆ ನಂತರ ನಿಗದಿಪಡಿಸಿದ ಒಂದು ತಿಂಗಳ ಅವಧಿಯೊಳಗೆ ಅವರಿಂದ ವರದಿ ಬಾರದಿದ್ದ ಪಕ್ಷದಲ್ಲಿ ಭೂ ಪರಿವರ್ತನೆ ಕೋರಿಕೆಗೆ ಅದರಿಂದ ಯಾವುದೇ ಆಕ್ಷೇಪಣೆ ಇಲ್ಲವೆಂದು ಪರಿಗಣಿಸಿ, ಕೋರಿಕೆಗಳ ಬಗ್ಗೆ ನಿಯಮಾನುಸಾರ ಮುಂದಿನ ಕ್ರಮವಹಿಸಲು ಅವಕಾಶ ಕಲ್ಪಿಸಲು ಉದ್ದೇಶಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಅರ್ಜಿದಾರರು ಆನ್‌ಲೈನ್ ಮುಖಾಂತರ ಭೂ ಪರಿವರ್ತನೆಗೆ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ ತಕ್ಷಣ ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರಗಳಿಗೆ ಅವರ ಅಭಿಪ್ರಾಯಕ್ಕಾಗಿ ಅರ್ಜಿಯನ್ನು ಏಕಕಾಲಕ್ಕೆ ಆನ್‌ಲೈನ್ ಮುಖಾಂತರ ಕಳುಹಿಸಿ, ನಿಗದಿತ ಕಾಲಮಿತಿಯೊಳಗೆ ಅವರಿಂದ ಆನ್‌ಲೈನ್‌ ಮುಖಾಂತರವೇ ಅಭಿಪ್ರಾಯ - ವರದಿ ಪಡೆದು ಭೂ ಪರಿವರ್ತನೆಗೆ ಕ್ರಮವಹಿಸುವುದರ ಮುಖಾಂತರ ಅರ್ಜಿದಾರರು ಪ್ರಸ್ತುತ ಎದುರಿಸುತ್ತಿರುವ ತೊಂದರೆಗಳನ್ನು ನಿವಾರಿಸಲು ಹಾಗೂ ಕಛೇರಿಗಳಿಗೆ ಅನಗತ್ಯವಾಗಿ ಅಲೆದಾಡುವುದನ್ನು ತಪ್ಪಿಸಲು ಭೂ ಪರಿವರ್ತನೆ ವಿಧಾನವನ್ನು ಸರಳೀಕರಿಸಲು ಪ್ರಸ್ತಾಪಿಸಲಾಗಿದೆ.

ಮೇಲೆ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ, 19640 95(2)ರಡಿ ಕಲಿಸಲಾದ ಅವಕಾಶದಂತೆ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬದಲಾಯಿಸಲು ಇರುವ ಭೂಪರಿವರ್ತನಾ ವಿಧಾನವನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಸರಳೀಕರಣಗೊಳಿಸಿ ಅನುಷ್ಠಾನಗೊಳಿಸಲು

ಸರ್ಕಾರವು ಆದೇಶಿಸಿದೆ.

(!) ಅರ್ಜದಾರರು ಭೂಪರಿವರ್ತನೆಗೆ ತಾಲ್ಲೂಕು ಕಛೇರಿ, ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ Online SOUDOST S Onlinese landrecords.kamataka.gov.in website Citizen login for Revenue Services link 395 Affidavit Based conversion module ನಲ್ಲಿ login ಆಗುವ ಮುಖಾಂತರ create account ನಲ್ಲಿ login ID ಅನ್ನು create ಮಾಡಿ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸುವುದು.

(೨) ಅರ್ಜಿದಾರರು ಭೂಪರಿವರ್ತನೆಗೆ ಸಲ್ಲಿಸಬೇಕಾದ ದಾಖಲೆಗಳು (1) ಚಾಲ್ತಿ ವರ್ಷದ ಪಹಣಿ ಪತ್ರಿಕೆ (2) ಹಕ್ಕು ಬದಲಾವಣೆ ದಾಖಲಾತಿ (ಮ್ಯೂಟೇಷನ್ ಪ್ರತಿ) (3) 11-ಇ ನಕ್ಷೆ (ಒಂದು ಸರ್ವೆ ನಂಬರಿನಲ್ಲಿ ಭಾಗಶ: ಭೂ ಪರಿವರ್ತನೆಗೆ ವಿನಂತಿಸಿದ ಸಂದರ್ಭದಲ್ಲಿ ಮಾತ್ರ 11-ಇ ನಕ್ಷೆ) ಆಗಿರತಕ್ಕದ್ದು.

(3) ಅರ್ಜಿದಾರರಿಂದ ಭೂ ಪರಿವರ್ತನ ಕೋರಿಕೆಯೊಂದಿಗೆ ಅಫಿಡೆವಿಟ್ ನಮೂನೆ-ಎ ನಲ್ಲಿ (ಅನುಬಂಧ) ಪಡೆಯತಕ್ಕದ್ದು, ಈ ಅಫಿಡೆವಿಟ್ ರೂ.200/-ರ ಮೌಲ್ಯದಲ್ಲಿರಬೇಕು.

(4) 5.50. (1)0 000 landrecords.karnataka.gov.in - website e login ಆಗುವ ಮೂಖಾಂತರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಅರ್ಜಿದಾರರು ಅಪ್‌ಲೋಡ್ ಮಾಡಿದ ನೋಟರಿಯವರಿಂದ ಪ್ರಮಾಣೀಕರಿಸಿದ ಅಫಿಡೆವಿಟ್‌ನ ಮೂಲ ಪ್ರತಿಯನ್ನು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ 7 ದಿನಗಳೊಳಗಾಗಿ ಜಿಲ್ಲಾಧಿಕಾರಿ/ತಹಶೀಲ್ದಾರ್ ಕಚೇರಿಯ ಅರ್ಜಿ ಸ್ವೀಕೃತಿ ಕೇಂದ್ರದಲ್ಲಿ ಭೂ ಪರಿವರ್ತನೆ ಕೋರಿಕೆ ಸಂಖ್ಯೆಯ ಮಾಹಿತಿಯೊಂದಿಗೆ ಹಸ್ತಾಂತರಿಸಿ, ಅದಕ್ಕೆ ಸ್ವೀಕೃತಿ ಪಡೆದು, ಸ್ವೀಕೃತಿಯನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು.

(5) ಕ್ರ.ಸಂ. (4) ರಲ್ಲಿ ತಿಳಿಸಿರುವಂತೆ ತಹಶೀಲ್ದಾರ್ ಕಚೇರಿಯ ಅರ್ಜಿ ಸ್ವೀಕೃತ ಕೇಂದ್ರದಲ್ಲಿ ಸ್ವೀಕೃತವಾದ ಅಫಿಡೆವಿಟ್‌ನ ಮೂಲ ಪ್ರತಿಯನ್ನು ಸ್ವೀಕರಿಸಿದ 48 ಗಂಟೆಯೊಳಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಹಸ್ತಾಂತರಿಸುವುದು.

(6) ಅರ್ಜಿದಾರರಿಂದ ಅನ್‌ಲೈನ್‌ನಲ್ಲಿ ಸ್ವೀಕೃತವಾದ ಭೂ ಪರಿವರ್ತನೆ ಕೋರಿಕೆ (ದಾಖಲೆಗಳು ಮತ್ತು ಅಫಿಡೆವಿಟ್‌ ನಮೂನೆ-ಎ ರೊಂದಿಗೆ) ಇಲಾಖೆ/ಪ್ರಾಧಿಕಾರಗಳಿಗೆ ಅವರ ಅಭಿಪ್ರಾಯಕ್ಕಾಗಿ ಏಕಕಾಲಕ್ಕೆ ತಪ್ಪದೇ ಆನ್‌ಲೈನ್‌ನಲ್ಲಿ ವರ್ಗಾಯಿಸತಕ್ಕದು.

(7) ವರ್ಗಾಯಿಸಲ್ಪಟ್ಟ ಇಲಾಖೆ/ಪ್ರಾಧಿಕಾರಗಳಿಂದ ಒಂದು ತಿಂಗಳ ಕಾಲಮಿತಿಯೊಳಗೆ ಅಭಿಪ್ರಾಯ/ವರದಿ ಬಾರದಿದ್ದಲ್ಲಿ ಭೂ ಪರಿವರ್ತನೆ ಕೋರಿಕೆ ಬಗ್ಗೆ ಅವರಿಂದ ಯಾವುದೇ ರೀತಿಯ ಆಕ್ಷೇಪಣೆ ಇಲ್ಲವೆಂದು ಪರಿಗಣಿಸಿ, ಕೂಡಲೇ ಭೂ ಪರಿವರ್ತನೆಗೆ ಮುಂದಿನ ಕ್ರಮ ವಹಿಸತಕ್ಕದ್ದು. ನಿಗದಿತ ಅವಧಿಯೊಳಗೆ ಅಭಿಪ್ರಾಯ/ವರದಿ ನೀಡಲು ತಪ್ಪಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಗಾರರಾಗಿರುತ್ತಾರೆ.

(8) ಭೂ ಪರಿವರ್ತನೆಗಾಗಿ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಿದ ದಿನಾಂಕದಿಂದ ಮುಂದಿನ 60 (ಅರವತ್ತು) ದಿನಗಳೊಳಗಾಗಿ ಭೂ ಪರಿವರ್ತನಾ ಆದೇಶ / ಹಿಂಬರಹವನ್ನು ಹೊರಡಿಸತಕ್ಕದ್ದು ಎಂದಿದ್ದಾರೆ.

   

]]>
Mon, 24 Nov 2025 15:32:52 +0530 shivuagrico
ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ವಿವಿ‍ಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ https://krushirushi.in/Applications-Invited-for-Subsidies-Under-Various-Schemes-for-women https://krushirushi.in/Applications-Invited-for-Subsidies-Under-Various-Schemes-for-women ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಎಂಬಂತೆ ‍ಧನಶ್ರೀ ಸೇರಿ ವಿವಿಧ ಯೋಜನೆಗೆ ಸರ್ಕಾರ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು, 2025ರ ಡಿಸೆಂಬರ್‌ 15ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.

ಉದ್ಯೋಗಿನಿ ಯೋಜನೆ : ಮಹಿಳೆಯರು ಅದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ: ಆದಾಯ ಮಿತಿ: ರೂ. 2.00 ಲಕ್ಷಗಳು

ಘಟಕ ವೆಚ್ಚ : ಕನಿಷ್ಠ ರೂ.1.00 ಲಕ್ಷದಿಂದ ಗರಿಷ್ಠ ರೂ. 3.00 ಲಕ್ಷಗಳು

ಸಹಾಯಧನ : ಶೇ. 50 ರಷ್ಟು

ಸಾಮಾನ್ಯ ವರ್ಗ:

ಆದಾಯ ಮಿತಿ: ರೂ. 1.50 ಲಕ್ಷಗಳು

ಘಟಕ ವೆಚ್ಚ: ಗರಿಷ್ಠ ರೂ.3.00 ಲಕ್ಷಗಳು

ಸಹಾಯಧನ : ಶೇ.30 ರಷ್ಟು

ಚೇತನ ಯೋಜನೆ : ಗಮನಿತ ಮಹಿಳೆಯರಿಗೆ ಅದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.

ವಯೋಮಿತಿ 18 ವರ್ಷ ಮೇಲ್ಪಟ್ಟು

ಧನಶ್ರೀ ಯೋಜನೆ : ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 30,000/-ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.

ವಯೋಮಿತಿ 18 ರಿಂದ 60 ವರ್ಷಗಳು.

(ಈ ಯೋಜನೆಯ ಅರ್ಜಿಯನ್ನು ಅನ್‌ಲೈನ್ ಮತ್ತು ಆಫ್‌ಲೈನ್‌ಗಳಲ್ಲಿ ಸಲ್ಲಿಸಬಹುದು)

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ: ಆಹಾರೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. (ಈ ಯೋಜನೆಯ ಅರ್ಜಿಯನ್ನು ಅನ್‌ಲೈನ್ ಮತ್ತು ಆಫ್‌ಲೈನ್‌ಗಳಲ್ಲಿ ಸಲ್ಲಿಸಬಹುದು)

ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ

1993-94 & 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000/- ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.

ವಿಶೇಷ ಸೂಚನೆ

ಅರ್ಜಿದಾರರು ತಮ್ಮಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು.

ಧನಶ್ರೀ ಯೋಜನೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಿಗೆ ಅರ್ಜಿದಾರರು ಅರ್ಜಿಯನ್ನು ಅನ್ ಲೈನ್ ಮತ್ತು ಆಫ್ ಲೈನ್ ನಲ್ಲಿ ಸಲ್ಲಿಸಬಹುದು. ಈ ಎರಡು ಯೋಜನೆಗಳಿಗೆ ಅರ್ಜಿಯನ್ನು ಆಫ್ ಲೈನ್ ನಲ್ಲಿ ಸಲ್ಲಿಸುವವರು ನಿಗದಿಪಡಿಸಿದ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ತಮ್ಮ ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿನಿಗಮ ಇವರನ್ನು ಸ೦ಪರ್ಕಿಸಿ ಅರ್ಜಿಸಲ್ಲಿಸುವುದು.

ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ (Unspent) ಅಮದಾನದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಸಹ ಸೇವಾ ಸಿಂಧು ಫೋರ್ಟರ್ ನಲ್ಲಿ ಅರ್ಜಿಸಲ್ಲಿಸುವುದು.

ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು / ಅರ್ಜಿದಾರರು ಮಾನ್ಯ ಸಚಿವರು /ಮಾನ್ಯ ಶಾಸಕರು ಕರ್ನಾಟಕ ಸರ್ಕಾರ /ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ (ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿಸಲ್ಲಿಸುವುದು. ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳನ್ನು ಫಲಾಪೇಕ್ಷಿಗಳು/ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್) ಕೇಂದ್ರಗಳಲ್ಲಿ ಅರ್ಜಿಸಲ್ಲಿಸುವುದು.

ಈ ಹಿಂದಿನ ಸಾಲುಗಳಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-12-2025 ರ ಸಂಜೆ 5:30 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅಥವಾ ನಿಗಮದ ವೆಬ್ ಸೈಟ್ (https://kswdc.karnataka.gov.in) ಸಂಪರ್ಕಿಸುವುದು.

]]>
Sat, 22 Nov 2025 13:24:51 +0530 shivuagrico
Out source jobs&ಇನ್ನು ಮುಂದೆ ಹೊರಗುತ್ತಿಗೆ ಸಿಬ್ಬಂದಿ ಸೇವೆ ಬಂದ್, ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ https://krushirushi.in/Out-source-jobs https://krushirushi.in/Out-source-jobs Out source jobs-ಇನ್ನು ಮುಂದೆ ಹೊರಗುತ್ತಿಗೆ ಸಿಬ್ಬಂದಿ ಸೇವೆ ಬಂದ್, ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ


ರಾಜ್ಯ ಸಚಿವ ಸಂಪುಟ ಉಪಸಮಿತಿಯು 2028ರ ಮಾರ್ಚ್‌ ವೇಳೆಗೆ ಹೊರಗುತ್ತಿಗೆ ನೌಕರರ ನೇಮಕವನ್ನು ಸಂಪೂರ್ಣವಾಗಿ ನಿಲ್ಲಿಸಲು ನಿರ್ಧರಿಸಿದೆ. ಸುಮಾರು 3.80 ಲಕ್ಷ ಹೊರಗುತ್ತಿಗೆ ನೌಕರರ ವ್ಯವಸ್ಥೆಗೆ ಕೊನೆ ಹಾಡಲು ಶಿಫಾರಸು ಮಾಡಲಾಗಿದ್ದು, ಇದರಿಂದ ಸರಕಾರಕ್ಕೆ ವಾರ್ಷಿಕ 10,000 ಕೋಟಿ ರೂ. ಹೆಚ್ಚುವರಿ ಹೊರೆ ಬೀಳುವ ಅಂದಾಜಿದೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ.

ಸರಕಾರಿ ಇಲಾಖೆ, ಸಂಸ್ಥೆಗಳಲ್ಲಿ ಹೊರಗುತ್ತಿಗೆ ನೌಕರರ ನೇಮಕ ಪದ್ಧತಿಯನ್ನು 2028ರ ಮಾರ್ಚ್‌ನೊಳಗೆ ಸಂಪೂರ್ಣ ನಿಲ್ಲಿಸಲು ರಾಜ್ಯ ಸಚಿವ ಸಂಪುಟ ಉಪಸಮಿತಿ ನಿರ್ಣಯಿಸಿದೆ. ಖಾಸಗಿ ಏಜೆನ್ಸಿಗಳ ಮೂಲಕ ಬಹುದೊಡ್ಡ ಸಂಖ್ಯೆಯಲ್ಲಿ ನೇಮಕಗೊಂಡಿರುವ ಹೊರಗುತ್ತಿಗೆ ಸೇವೆಯನ್ನು ಈ ಗಡುವಿನೊಳಗೆ ಹಂತಹಂತವಾಗಿ ನಿಲ್ಲಿಸಲು ನಿರ್ಧರಿಸಲಾಗಿದೆ. ಈ ತೀರ್ಮಾನದಿಂದ ಸರಕಾರದ ಬೊಕ್ಕಸಕ್ಕೆ ವಾರ್ಷಿಕ ಹೆಚ್ಚುವರಿ 10,000 ಕೋಟಿ ರೂ. ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ಅಂದಾಜು ಮಾಡಲಾಗಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ ಅಧ್ಯಕ್ಷತೆಯ ಸಂಪುಟ ಉಪಸಮಿತಿ ಈ ನಿರ್ಣಯ ಮಾಡಿದ್ದು, ಸದ್ಯ ನಾನಾ ಇಲಾಖೆ, ನಿಗಮ -ಮಂಡಳಿ, ವಿವಿಗಳು ಸೇರಿದಂತೆ ನಾನಾ ಸಂಸ್ಥೆಗಳಲ್ಲಿನ ಸುಮಾರು 3.80 ಲಕ್ಷ ಹೊರಗುತ್ತಿಗೆ ನೌಕರರ ವ್ಯವಸ್ಥೆಗೆ ಕೊನೆ ಹಾಡಲು ಸಮಿತಿ ಶಿಫಾರಸು ಮಾಡಿದೆ. ಮುಂದಿನ ವಾರ ನ.27ರಂದು ನಡೆಯಲಿರುವ ಸಂಪುಟ ಸಭೆ ಮುಂದೆ ಈ ಸಮಿತಿಯ ನಿರ್ಣಯ ಮತ್ತು ಶಿಫಾರಸುಗಳು ಮಂಡನೆಯಾಗಲಿವೆ.

ಹೊರಗುತ್ತಿಗೆ ಸೇವೆ ಸ್ಥಗಿತಗೊಳಿಸಲು ಸುಪ್ರೀಂ ಕೋರ್ಟ್‌ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳನ್ನು ಪರಾಮರ್ಶಿಸಿ ಸಂಪುಟ ಉಪಸಮಿತಿ ಈ ನಿರ್ಣಯ ಮಾಡಿದೆ. ಖಾಲಿ ಹುದ್ದೆಗಳಿಗೆ ನೇರ ನೇಮಕ ಆಗುವವರೆಗೆ ಕಚೇರಿಗಳ ನಿರ್ವಹಣೆ ಮತ್ತು ಆಡಳಿತಕ್ಕೆ ತೊಂದರೆಯಾಗದಂತೆ ಏಜೆನ್ಸಿಗಳ ಮೂಲಕ ಪಡೆಯುತ್ತಿರುವ ಹೊರಗುತ್ತಿಗೆ ಸೇವೆಯನ್ನು ಮುಂದುವರಿಸಬೇಕು. ಅಲ್ಲಿಯವರೆಗೆ ಈ ನೌಕರರಿಗೆ ಏಜೆನ್ಸಿಗಳಿಂದ ಅಗುತ್ತಿರುವ ಶೋಷಣೆ ತಗ್ಗಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಂಘವೊಂದನ್ನು ಸ್ಥಾಪಿಸಿ ಮೇಲ್ವಿಚಾರಣೆ ವ್ಯವಸ್ಥೆ ಮಾಡಬೇಕು. ನಿಗದಿತ ಕಾಲದವರೆಗೆ ಮಾತ್ರ ಈ ತಾತ್ಕಾಲಿಕ ವ್ಯವಸ್ಥೆ ಮುಂದುವರಿಯಬೇಕು ಎಂದು ಸಂಪುಟ ಉಪಸಮಿತಿ ಶಿಫಾರಸು ಮಾಡಿದೆ.

ಪ್ರಮುಖ ನಿರ್ಣಯ/ಶಿಫಾರಸುಗಳು

 

  • 2028ರ ಮಾರ್ಚ್‌ನೊಳಗೆ ಸರಕಾರದ ಎಲ್ಲ ಇಲಾಖೆ, ಸಂಸ್ಥೆಗಳಲ್ಲಿ ಖಾಸಗಿ ಏಜೆನ್ಸಿಗಳ ಮೂಲಕ ಹೊರಗುತ್ತಿಗೆ ಸೇವೆ ಪಡೆದುಕೊಳ್ಳುವ ಪದ್ದತಿಯನ್ನು ಸಂಪೂರ್ಣವಾಗಿ ಸಮಾಪ್ತಿಗೊಳಿಸಬೇಕು
  • ಸಂವಿಧಾನದ ಅನುಚ್ಛೇದ 14 ಮತ್ತು 15ರ ಆಶಯಗಳು ಉಲ್ಲಂಘನೆಯಾಗದಂತೆ ಸದ್ಯದ ಕಾನೂನು, ನಿಯಮಾವಳಿ ಮೂಲಕವೇ ಸರಕಾರದ ನಾನಾ ಇಲಾಖೆಗಳಲ್ಲಿಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಅದಕ್ಕಾಗಿ ಎಲ್ಲ ಅಗತ್ಯ ಕ್ರಮ, ಸಿದ್ಧತೆ ಮಾಡಬೇಕು
  • ಸದ್ಯಕ್ಕೆ ಸರಕಾರಿ ಕಚೇರಿಗಳ ನಿರ್ವಹಣೆ, ಆಡಳಿತಕ್ಕೆ ತೊಂದರೆ ಆಗದಂತೆ ಏಜೆನ್ಸಿಗಳ ಮೂಲಕ ಪಡೆಯುತ್ತಿರುವ ಹೊರಗುತ್ತಿಗೆ ಸೇವೆಯನ್ನು ಕೆಲಕಾಲ ಮುಂದುವರಿಸಬೇಕು. ಅಲ್ಲಿಯವರೆಗೆ 'ಕರ್ನಾಟಕ ಹೊರಗುತ್ತಿಗೆ ನೌಕರರ (ನಿಯಂತ್ರಣ, ನಿಯುಕ್ತಿ ಮತ್ತು ಕಲ್ಯಾಣ) ವಿಧೇಯಕ -2025'ಅನ್ನು ರೂಪಿಸಿ, ಜಾರಿಗೊಳಿಸಬೇಕು
  • ಈಗಾಗಲೇ ಬಹುದೊಡ್ಡ ಸಂಖ್ಯೆಯಲ್ಲಿ ಹೊರಗುತ್ತಿಗೆ ಮೂಲಕ ಭರ್ತಿ ಮಾಡಿರುವ ಕೆಲಸಗಾರರು ನಾನಾ ಇಲಾಖೆಗಳಲ್ಲಿದ್ದಾರೆ. ಈ ನೌಕರರಿಗೆ ಏಜೆನ್ಸಿಗಳಿಂದ ಆಗುತ್ತಿರುವ ಶೋಷಣೆ ತಗ್ಗಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಂಘ ಸ್ಥಾಪಿಸಿ ಮೇಲ್ವಿಚಾರಣೆ ವ್ಯವಸ್ಥೆ ಮಾಡಬೇಕು. ನಿಗದಿತ ಕಾಲದವರೆಗಷ್ಟೇ ಈ ತಾತ್ಕಾಲಿಕ ವ್ಯವಸ್ಥೆ ಮುಂದುವರಿಯಬೇಕು
  • ರಾಜ್ಯದಲ್ಲಿ3.80 ಲಕ್ಷ ಖಾಲಿ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಏಜೆನ್ಸಿಗಳ ಮೂಲಕ ಭರ್ತಿ ಮಾಡುತ್ತಿದ್ದು, ಇದರಿಂದ ಪ್ರತಿಭಾವಂತ ಯುವಕರಿಗೆ ಅನ್ಯಾಯವಾಗುತ್ತಿದ್ದು, ಸರಕಾರಿ ಸೇವೆಗೆ ಅರ್ಹರು ಸಿಗುತ್ತಿಲ್ಲ. ಮುಖ್ಯವಾಗಿ, ಮೀಸಲು ನಿಯಮಗಳ ಉಲ್ಲಂಘನೆಯಾಗುತ್ತಿದೆ
  • ಖಾಸಗಿ, ಎನ್‌ಜಿಒಗಳ ಮೂಲಕ ನಡೆಯುತ್ತಿರುವ ಹೊರಗುತ್ತಿಗೆ ನೌಕರರ ಸೇವೆಯನ್ನು ಸಂಪೂರ್ಣವಾಗಿ ನಿಲ್ಲಿಸುವ ನಿರ್ಣಯ ಮಾಡುವುದು ಅನಿವಾರ್ಯ. ಅದಕ್ಕಾಗಿ ಕಾನೂನಾತ್ಮಕ ಅವಕಾಶಗಳು, ಹೈಕೋರ್ಟ್‌ ತೀರ್ಪುಗಳನ್ನು ಬಳಸಿಕೊಳ್ಳಬೇಕು. ಮುಖ್ಯವಾಗಿ, ಸುಪ್ರೀಂ ಕೋರ್ಟ್‌ ನೀಡಿರುವ ಆದೇಶದಂತೆ ಹೊರಗುತ್ತಿಗೆ ಪದ್ದತಿಯನ್ನು ಸಂಪೂರ್ಣವಾಗಿ ನಿಲ್ಲಿಸಲು ಕ್ರಮ ವಹಿಸಬೇಕು

ತೀರ್ಮಾನದ ಹಿನ್ನೆಲೆ


ಸುಪ್ರೀಂ ಕೋರ್ಟ್‌ ಕಳೆದ ಆಗಸ್ಟ್‌ 19ರಂದು ನೀಡಿದ್ದ ಆದೇಶದಲ್ಲಿ ಉದ್ಯೋಗ ನೀಡುವುದು ಸಂವಿಧಾನದ ವಿಧಿ 14, 16 ಮತ್ತು 21ರ ಅನ್ವಯ ಸರಕಾರದ ಹೊಣೆಗಾರಿಕೆ. ಇಂಧನ, ಆರೋಗ್ಯ, ಗಣಿ ಮತ್ತು ಭೂವಿಜ್ಞಾನ ಮತ್ತಿತರ ಇಲಾಖೆಗಳಲ್ಲಿನ ಅಪಾಯಕಾರಿ ಕೆಲಸಗಳು ಸೇರಿ ನಾನಾ ಹುದ್ದೆಗಳಿಗೆ ಕಾಯಂ ನೇಮಕವೇ ಆಗಬೇಕು. ಆದರೆ, ವಿದ್ಯುತ್‌ ಸರಬರಾಜು ಕಂಪನಿಗಳ (ಎಸ್ಕಾಂ) ಸಿಬ್ಬಂದಿ, ಆರೋಗ್ಯ ಇಲಾಖೆಯ ಶುಶ್ರೂಷಕರು ಸೇರಿ ನಾನಾ ಇಲಾಖೆಗಳಲ್ಲಿ ಅಪಾಯಕಾರಿ ಕೆಲಸ ಮಾಡುವವರು ಸದ್ಯ ಬಹುತೇಕ ಹೊರಗುತ್ತಿಗೆ ನೌಕರರೇ ಆಗಿದ್ದಾರೆ. ಇದು ಕಾನೂನುಬಾಹಿರ. ಈ ಹೊರಗುತ್ತಿಗೆ ನೌಕರರನ್ನು ಸಕ್ರಮಗೊಳಿಸಿ ಅಥವಾ ನೇರ ನೇಮಕದ ಮೂಲಕ ಕಾಯಂ ನೌಕರರು ಇರಬೇಕು. ಈ ಎರಡು ಆಯ್ಕೆಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕು. ಹೊರಗುತ್ತಿಗೆ ಅವಲಂಬನೆಯು ಸಂವಿಧಾನದ ಸ್ಪಷ್ಟ ಉಲ್ಲಂಘನೆ ಎಂದು ಸ್ಪಷ್ಟಪಡಿಸಿತ್ತು.

ಸುಪ್ರೀಂ ಕೋರ್ಟ್‌ ಈ ಆದೇಶ ಪಾಲನೆ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ ಅವರ ಅಧ್ಯಕ್ಷತೆಯಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಮತ್ತಿತರ ಸಚಿವರನ್ನು ಒಳಗೊಂಡ ಸಂಪುಟ ಉಪಸಮಿತಿ ರಚನೆಯಾಗಿತ್ತು.

ತಕ್ಷಣದ ಆದ್ಯತೆ


ಆರೋಗ್ಯ ಇಲಾಖೆಯಲ್ಲಿ ಸಾಂಕ್ರಾಮಿಕ ರೋಗಗಳ ಚಿಕಿತ್ಸೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಶುಶ್ರೂಷಕರು, ಎಸ್ಕಾಂಗಳ ಗ್ಯಾಂಗ್‌ಮನ್‌, ಚಾಲಕರು, ಗಣಿಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು, ಪೌರ ಕಾರ್ಮಿಕರು ಸೇರಿ ಅಪಾಯಕಾರಿ ಕೆಲಸಗಳ ಹೊರಗುತ್ತಿಗೆಯನ್ನು ಆದ್ಯತೆ ಮೇಲೆ ಮೊದಲ ಹಂತದಲ್ಲೇ ರದ್ದುಪಡಿಸಬೇಕು. ಉಳಿದ ಹೊರಗುತ್ತಿಗೆ ಹುದ್ದೆಗಳನ್ನು ಹಂತಹಂತವಾಗಿ ಅಂತ್ಯಗೊಳಿಸಬೇಕು ಎಂಬುದು ಸಮಿತಿ ಶಿಫಾರಸಿನಲ್ಲಿದೆ.

]]>
Sat, 22 Nov 2025 06:25:48 +0530 shivuagrico
ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ https://krushirushi.in/Sheep--and-Dairy-Farming-Training-for-free https://krushirushi.in/Sheep--and-Dairy-Farming-Training-for-free *ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ*

*ಹಾವೇರಿ ಜಿಲ್ಲೆಯವರಿಗೆ ಮಾತ್ರ*

ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ 14 ದಿನಗಳ ಹೈನುಗಾರಿಕೆ, ಕುರಿ ಸಾಕಾಣಿಕೆ, ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಯನ್ನು ದಿನಾಂಕ 17.12.2025 ರಿಂದ 21.12.2025 ರ ವರೆಗೆ ಊಟ ವಸತಿಯೊಂದಿಗೆ ಉಚಿತವಾಗಿ ನೀಡಲಾಗುವುದು 

ಆಸಕ್ತಿಯುಳ್ಳ ಅಭ್ಯರ್ಥಿಗಳು ಕೂಡಲೇ ಕೆಳಗಿನ ಸಂಖ್ಯೆಗೆ ಕರೆ ಮಾಡಿರಿ 

8660219375

]]>
Fri, 21 Nov 2025 17:14:49 +0530 shivuagrico
ರಾಜ್ಯದ ಗ್ರಾಮೀಣ ಭಾಗದ ರೈತರಿಗೆ ಗುಡ್ ನ್ಯೂಸ್ : 'ಗಂಗಾ ಕಲ್ಯಾಣ' ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ https://krushirushi.in/Applications-Open-for-the-Ganga-Kalyana-Scheme https://krushirushi.in/Applications-Open-for-the-Ganga-Kalyana-Scheme ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಸಣ್ಣ ಹಾಗೂ ಅತೀ ಸಣ್ಣ ರೈತರಿಗೆ ಬೋರ್ವೆಲ್ ಕೊರೆದು, ಪಂಪ್ ಮೋಟಾರ್ ಹಾಗೂ ವಿದ್ಯುದೀಕರಣ ಮಾಡಿ ನೀರನ್ನು ಒದಗಿಸಲಾಗುತ್ತದೆ.

ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಸರ್ಕಾರವು ರೂ.

4.00 ಲಕ್ಷಗಳನ್ನು 1. ಬೆಂಗಳೂರು ಗ್ರಾಮಾಂತರ 2. ಕೋಲಾರ 3. ಚಿಕ್ಕಬಳ್ಳಾಪುರ 4. ರಾಮನಗರ 5. ತುಮಕೂರು. ಜಿಲ್ಲೆಗಳಿಗೆ ನಿಗದಿಪಡಿಸಿದ್ದು ಮತ್ತು ಇತರೆ ಜಿಲ್ಲೆಗಳಿಗೆ ರೂ. 3.00 ಲಕ್ಷಗಳನ್ನು ನಿಗದಿಪಡಿಸಿರುತ್ತದೆ. ಅರ್ಜಿದಾರರು ಈ ಮೊತ್ತದಲ್ಲಿ ಕೊಳವೆ ಬಾವಿ ಕೊರೆಯುವಿಕೆ, ಪಂಪು ಮೋಟಾರು ಸರಬರಾಜು ಮತ್ತು ವಿದ್ಯುದೀಕರಣ ಮಾಡಿಕೊಡಲಾಗುತ್ತದೆ. ಠೇವಣಿ ಹಣ ರೂ. 75,000/-ವನ್ನು ನಿಗಮದಿಂದ ನೇರವಾಗಿ ಸಂಬಂಧಪಟ್ಟ ESCOM ಗಳಿಗೆ ಪಾವತಿಸಲಾಗುವುದು.

ಅರ್ಹತೆ

ಅರ್ಜಿದಾರರು ಕರ್ನಾಟಕ ರಾಜ್ಯದ ಕಾಯಂ ನಿವಾಸಿಯಾಗಿರಬೇಕು.

ಅರ್ಜಿದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರಾಗಿರಬೇಕು.

ಪ್ರತಿ ಫಲಾನುಭವಿಗೆ 1 ಎಕರೆ 20 ಗುಂಟೆ (1 ಎಕರೆ 50 ಸೆಂಟ್ಸ್) ಎಕರೆಯಿಂದ 5 ಎಕರೆಯವರೆಗೆ ಕೃಷಿ ಜಮೀನಿರಬೇಕು.

ಕೊಡಗು, ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಇಂತಹ ಜಿಲ್ಲೆಗಳಲ್ಲಿ ಜಮೀನಿನ ಲಭ್ಯತೆ ಬಹಳ ಕಡಿಮೆ ಇರುವುದರಿಂದ ಕನಿಷ್ಠ 1 ಎಕರೆ ಜಮೀನನ್ನು ಹೊಂದಿರತಕ್ಕದ್ದು.

ಅರ್ಜಿದಾರರು ಸಣ್ಣ / ಅತೀಸಣ್ಣ ಹಿಡುವಳಿದಾರ ರೈತರಾಗಿರಬೇಕು.

ಗ್ರಾಮೀಣ ಪ್ರದೇಶಗಳಲ್ಲಿ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ. 6.00 ಲಕ್ಷಗಳನ್ನು ಮೀರಿರಬಾರದು.

ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಇರಬೇಕು.

ಸಲ್ಲಿಸಬೇಕಾದ ದಾಖಲೆಗಳು:

ಫಲಾನುಭವಿಯ ಆನ್ಲೈನ್ ಅರ್ಜಿ ಹಾಗೂ ಪಾಸ್ಪೋರ್ಟ್ ಅಳತೆಯ ಪೋಟೋ

ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಮತ್ತು ಮತ್ತು ಅಲ್ಪಸಂಖ್ಯಾತರ ಪ್ರಮಾಣಪತ್ರ.

ಆಧಾರ್ ಕಾರ್ಡ್ ಪ್ರತಿ (ವಿಳಾಸದ ಪುರಾವೆ).

ಜಮೀನಿಗೆ ಸಂಬಂಧಿಸಿದ ಇತ್ತೀಚಿನ ಆರ್.ಟಿ.ಸಿ.ಪ್ರತಿ.

5ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಸಣ್ಣ/ಅತಿಸಣ್ಣ ಹಿಡುವಳಿದಾರರ

ಭೂ-ಕಂದಾಯ ಪಾವತಿಸಿದ ರಸೀದಿ

ಸ್ವಯಂಘೋಷಣೆ ಪತ್ರ.

ಹೆಚ್ಚಿನ ವಿವರಗಳಿಗೆ ನಿಗಮದ ವೆಬ್ಸೈಟ್ಗೆ /KMDC ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಭೇಟಿ ಕೊಡಿ

ವಿ.ಸೂ: KMDC ಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳಂತೆ ಈ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು.

 

]]>
Fri, 21 Nov 2025 10:27:58 +0530 shivuagrico
Pmkisan ineleigible list&ರಾಜ್ಯದ 7 ಲಕ್ಷ ಸೇರಿದಂತೆ 70 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Pmkisan-ineleigible-list- https://krushirushi.in/Pmkisan-ineleigible-list- Pmkisan ineleigible list-ರಾಜ್ಯದ 7 ಲಕ್ಷ ಸೇರಿದಂತೆ 70 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆ ಅನ್ವಯ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ 9 ಕೋಟಿ ರೈತರ ಖಾತೆಗಳಿಗೆ ತಲಾ 2 ಸಾವಿರ ರೂ. ಜಮೆ ಮಾಡಿದ್ದಾರೆ. ಒಟ್ಟು 18 ಸಾವಿರ ಕೋಟಿ ರೂಪಾಯಿಯನ್ನು ಮೋದಿ ಅವರು ಜಮೆ ಮಾಡಿದ್ದಾರೆ. ಆದರೆ, ಮಹತ್ವದ ಬೆಳವಣಿಗೆಯೊಂದರಲ್ಲಿ ಈ ಬಾರಿ ಸುಮಾರು 70 ಲಕ್ಷ ರೈತರನ್ನು ಪಿಎಂ ಕಿಸಾನ್ ಯೋಜನೆಯಿಂದ ಕೈಬಿಡಲಾಗಿದೆ.

70 ಲಕ್ಷ ರೈತರಿಗೆ ಕೊಕ್

2024-25ನೇ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರವು 10.6 ಕೋಟಿ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ 2 ಸಾವಿರ ರೂ. ಜಮೆ ಮಾಡಿತ್ತು. ಆದರೆ, ಈ ಬಾರಿ ಯೋಜನೆಗೆ ಅನರ್ಹರಾಗಿರುವ 70 ಲಕ್ಷ ರೈತರನ್ನು ಕೈಬಿಡಲಾಗಿದೆ. ಅಂದರೆ, 21ನೇ ಕಂತಿನ ಹಣವನ್ನು 9.7 ಕೋಟಿ ರೈತರ ಖಾತೆಗಳಿಗೆ ಜಮೆ ಮಾಡಲಾಗಿದೆ.

ಪಿಎಂ ಕಿಸಾನ್ ಯೋಜನೆಯು ಸಣ್ಣ ರೈತರಿಗೆ ಅನುಕೂಲವಾಗಲಿ ಎಂದು ಜಾರಿಗೆ ತರಲಾಗಿದೆ. ಹಾಗಾಗಿ, ಹೆಚ್ಚಿನ ಜಮೀನು ಹೊಂದಿರುವವರು, ಆದಾಯ ಹೊಂದಿರುವವರು, ಆದಾಯ ತೆರಿಗೆ ಪಾವತಿಸುವ ರೈತರು, ಸರ್ಕಾರಿ ಉದ್ಯೋಗಿಗಳು ಹಾಗೂ ತಿಂಗಳಿಗೆ 10 ಸಾವಿರ ರೂ.ಗಿಂತ ಹೆಚ್ಚಿನ ಪಿಂಚಣಿ ಪಡೆಯುವ ರೈತರನ್ನು ಯೋಜನೆಯಿಂದ ಕೈಬಿಡಲಾಗಿದೆ.

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ನೋಂದಾಯಿಸಿದ್ಧ ರಾಜ್ಯದ 7 ಲಕ್ಷಕ್ಕೂ ಅಧಿಕ ರೈತರನ್ನು ಅನರ್ಹಗೊಳಿಸಲಾಗಿದೆ.


ರಾಜ್ಯದಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಆರಂಭವಾದ ಒಂದು ವರ್ಷದಲ್ಲಿ 53.81 ಲಕ್ಷಕ್ಕೂ ಅಧಿಕ ರೈತರು ನೋಂದಣಿ ಮಾಡಿಸಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದರು.

ಇವರ ಪೈಕಿ 7 ಲಕ್ಷಕ್ಕೂ ಅಧಿಕ ರೈತರನ್ನು ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಅನರ್ಹಗೊಳಿಸಲಾಗಿದೆ.

ಭೂ ದಾಖಲೆಗಳ ಕೊರತೆ, ಇ-ಕೆವೈಸಿ ಸಮಸ್ಯೆ, ತೆರಿಗೆ ಪಾವತಿದಾರರು, ಸರ್ಕಾರಿ ನೌಕರಿ ಹೊಂದಿರುವುದು, ಸಾಂವಿಧಾನಿಕ ಹುದ್ದೆಗಳಲ್ಲಿ ಕಾರ್ಯನಿರ್ವಹಣೆ ಸೇರಿದಂತೆ ಅನೇಕ ಕಾರಣಗಳಿಂದ ಹಂತ ಹಂತವಾಗಿ ಪರಿಶೀಲನೆ ನಡೆಸಿ ಸುಮಾರು 7 ಲಕ್ಷ ರೈತರನ್ನು ಅನರ್ಹಗೊಳಿಸಲಾಗಿದೆ.

2018ರಲ್ಲಿ ಯೋಜನೆ ಆರಂಭವಾದ ಸಂದರ್ಭದಲ್ಲಿ 19,819 ರೈತರು ನೋಂದಾಯಿಸಿದ್ದು, 2019-20 ರಲ್ಲಿ 53,81,184 ರೈತರು ನೋಂದಾಯಿಸಿದ್ದರು. ಅರ್ಹರಲ್ಲದವರು ಕೂಡ ಹೆಸರು ನೋಂದಾಯಿಸಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದರಿಂದ ಪರಿಶೀಲನೆ ಕಾರ್ಯ ಆರಂಭಿಸಲಾಗಿದ್ದು, ಈಗ 47.50 ಲಕ್ಷ ರೈತರು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ.

ರೈತರ ನೋಂದಣಿ ಕಾರ್ಯ ನಿರಂತರವಾಗಿ ನಡೆಯುವುದರಿಂದ ಪ್ರತಿ ಕಂತು ವಿತರಣೆಯ ಸಂದರ್ಭದಲ್ಲಿ ರೈತರ ಸಂಖ್ಯೆ ಹೆಚ್ಚು ಕಡಿಮೆಯಾಗುತ್ತದೆ. ಅರ್ಹರನ್ನು ಸೇರಿಸುವುದು, ಅನರ್ಹರನ್ನು ಕೈಬಿಡುವ ಪ್ರಕ್ರಿಯೆ ನಿರಂತರವಾಗಿರುತ್ತದೆ.

ಆಧಾರ್ ಮತ್ತು ಪಹಣಿಯೊಂದಿಗೆ ಫ್ರೂಟ್ಸ್ ಐಡಿ ತಂತ್ರಾಂಶದಲ್ಲಿ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿ ಇ-ಕೆವೈಸಿಯೊಂದಿಗೆ ಕಿಸಾನ್ ಸಮ್ಮಾಣ್ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಜಮೀನಿನ ಮಾಲೀಕರು ನಿಧನರಾಗಿದ್ದಲ್ಲಿ ಇತರೆ ವಾರಸುದಾರರು ಪೌತಿ ಖಾತೆ ಮಾಡಿಸಿದರೆ ಯೋಜನೆಗೆ ಅರ್ಹರಾಗುತ್ತಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2019 ರ ನಂತರ ಜಮೀನು ಖರೀದಿಸಿದವರು ಮತ್ತು ತಂದೆಯ ಜಮೀನನ್ನು ಭಾಗ ಮಾಡಿಕೊಂಡಿದ್ದರೆ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಲಾಗಿದೆ. ಒಂದು ವೇಳೆ ತಾಂತ್ರಿಕ ದೋಷ, ಇ-ಕೆವೈಸಿ ಸಮಸ್ಯೆಯಿಂದ ಯಾವುದೇ ರೈತರ ಹೆಸರು ಪಟ್ಟಿಯಿಂದ ಹೊರಗುಳಿದಿದ್ದರೆ ಮತ್ತೊಮ್ಮೆ ಪರಿಶೀಲನೆಗೆ ಒಳಪಡಿಸಲು ಅವಕಾಶವಿದೆ. ಈ ಯೋಜನೆಯಡಿ ವಾರ್ಷಿಕ 6,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. 3 ಕಂತುಗಳಲ್ಲಿ 4 ತಿಂಗಳಿಗೊಮ್ಮೆ ನೇರವಾಗಿ ರೈತರ ಖಾತೆಗೆ 2 ಸಾವಿರ ರೂ. ವರ್ಗಾಯಿಸಲಾಗುವುದು.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 20ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 20th instalment eligible list

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

Pmkisan 20th instalment ineligible list-ಪಿಎಂ ಕಿಸಾನ್ 19ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Fri, 21 Nov 2025 07:47:46 +0530 shivuagrico
Rabi crop&ಹಿಂಗಾರು ಬೆಳೆ ಬೆಳೆದ ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಮಾಹಿತಿ https://krushirushi.in/Big-Update-for-Rabi-&-Summer-Crop-Farmers-from-the-Agriculture-Department https://krushirushi.in/Big-Update-for-Rabi-&-Summer-Crop-Farmers-from-the-Agriculture-Department Rabi crop-ಹಿಂಗಾರು ಬೆಳೆ ಬೆಳೆದ ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಮಾಹಿತಿ


ಇಲಾಖೆಯಿಂದ 2025-26ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕೊಪ್ಪಳ ತಾಲ್ಲೂಕಿನ ಹೋಬಳಿ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳೆಗಳನ್ನು ಬೆಳೆವಿಮೆಗೆ ನೋಂದಾಯಿಸಲು ರೈತರಿಗೆ ತಿಳಿಸಿದೆ.

ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಮಳೆ ಆಶ್ರಿತ ಮತ್ತು ನೀರಾವರಿ ಬೆಳೆಗಳಾದ ಜೋಳ ಹಾಗೂ ಸೂರ್ಯಕಾಂತಿ, ಮಳೆ ಆಶ್ರಿತ ಕುಸುಮೆ ಬೆಳೆಗೆ ವಿಮೆ ನೋಂದಾಯಿಸಲು ಡಿಸೆಂಬರ್ 1 ಕೊನೆಯ ದಿನವಾಗಿದೆ. ಮಳೆ ಆಶ್ರಿತ ಮತ್ತು ನೀರಾವರಿ ಗೋಧಿ ಬೆಳೆಗೆ ವಿಮೆ ನೋಂದಾಯಿಸಲು ಡಿಸೆಂಬರ್ 15 ಕೊನೆಯ ದಿನವಾಗಿದೆ. ಮಳೆ ಆಶ್ರಿತ ಮತ್ತು ನೀರಾವರಿ ಕಡಲೆ ಬೆಳೆಗೆ ವಿಮೆ ನೋಂದಾಯಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಬೇಸಿಗೆ ಹಂಗಾಮಿನ ನೀರಾವರಿ ಬೆಳೆಗಳಾದ ಶೇಂಗಾ, ಭತ್ತ ಹಾಗೂ ಸೂರ್ಯಕಾಂತಿಗೆ ವಿಮೆ ನೋಂದಾಯಿಸಲು 2026 ರ ಫೆಬ್ರವರಿ 27 ಕೊನೆಯ ದಿನವಾಗಿದೆ.

ಬೆಳೆವಿಮೆ ಪರಿಹಾರ ಲಾಭ ಪಡೆಯಲು ರೈತರು ಕಡ್ಡಾಯವಾಗಿ ಎಫ್‌ಐಡಿ ಯನ್ನು ಹೊಂದಿರಬೇಕು. ರೈತರು ಬಿತ್ತನೆ ಮಾಡುವ ಬೆಳೆಯನ್ನೇ ನೋಂದಾಯಿಸಬೇಕು. ತಮ್ಮ ಬೆಳೆಯನ್ನು ತಾವೇ ಖುದ್ದಾಗಿ ಬೆಳೆ ಸಮೀಕ್ಷೆಯನ್ನು ಮಾಡಬೇಕು. ತಮ್ಮ ದಾಖಲಾತಿಗಳಾದ ಪಹಣಿ, ಆಧಾರ್ ಕಾರ್ಡ್ ಮತ್ತು ಪಾಸ್‌ಬುಕ್ ಜೆರಾಕ್ಸ್ ಪ್ರತಿಗಳನ್ನು ಯಾವುದೇ ಕಾರಣಕ್ಕೂ ಇನ್ನೊಬ್ಬರಿಗೆ ನೀಡದೆ, ಖುದ್ದಾಗಿ ಬೆಳೆವಿಮೆ ನೋಂದಾಯಿಸಲು ಸೂಚಿಸಿದೆ.

ಜಿಲ್ಲಾವಾರು,ಬೆಳೆವಾರು ಬೆಳೆವಿಮೆ ದಿನಾಂಕ ಬಿಡುಗಡೆ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ-crop insurance last date  

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2025-26" ಮತ್ತು ಋುತು "Rabi"

ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ

ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ

]]>
Thu, 20 Nov 2025 16:16:57 +0530 shivuagrico
ಕೇಂದ್ರದಿಂದ ಬಂಪರ್‌ ಗಿಫ್ಟ್‌: ರೈತರಿಗೆ ಕುರಿ, ಕೋಳಿ, ಹಂದಿ ಸಾಕಾಣಿಕೆಗೆ ಬರೊಬ್ಬರಿ 25 ಲಕ್ಷ ರೂ ಸಬ್ಸಿಡಿ..! ಹೀಗೆ ಅರ್ಜಿ ಸಲ್ಲಿಸಿ.! https://krushirushi.in/bumper-subsidy-of-up-to-25-lakh-for-farmers-to-start-sheep-poultry-and-pig-farming-units https://krushirushi.in/bumper-subsidy-of-up-to-25-lakh-for-farmers-to-start-sheep-poultry-and-pig-farming-units

ಸರ್ಕಾರವು 2021-22ನೇ ಸಾಲಿನಿಂದ ಜಾರಿಗೆ ತಂದಿರುವ ಪರಿಷ್ಕೃತ ರಾಷ್ಟ್ರೀಯ ಜಾನುವಾರು ಮಿಷನ್ ಗ್ರಾಮೀಣ ಪ್ರದೇಶಗಳಲ್ಲಿ ಕೋಳಿ, ಕುರಿ ಮತ್ತು ಹಂದಿ ಸಾಕಾಣಿಕೆ ವಲಯಕ್ಕೆ ಹೊಸ ಚೈತನ್ಯ ತುಂಬುತ್ತಿದೆ. ಉದ್ಯಮಶೀಲತೆ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಮತ್ತು ಪ್ರತಿ ಪ್ರಾಣಿಯ ಉತ್ಪಾದಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಈ ಮಿಷನ್ ಅಡಿಯಲ್ಲಿ, ಅರ್ಹ ಫಲಾನುಭವಿಗಳಿಗೆ ಯೋಜನಾ ವೆಚ್ಚದ 50% (ಗರಿಷ್ಠ ₹25 ಲಕ್ಷ) ರಷ್ಟು ಸಹಾಯಧನ ನೀಡಲಾಗುತ್ತಿದೆ.

ಮುಖ್ಯ ಅಂಶಗಳು

ಕೋಳಿ ಫಾರ್ಮ್, ಹ್ಯಾಚರಿ, ಮದರ್ ಯೂನಿಟ್ ಸ್ಥಾಪನೆಗೆ 50% ಸಹಾಯಧನ

ಗರಿಷ್ಠ ಮಿತಿ ₹25 ಲಕ್ಷ

ವೈಯಕ್ತಿಕ ರೈತರು, SHG, FPO, ಸಹಕಾರಿ ಸಂಘಗಳು, ಉದ್ಯಮಿಗಳು - ಎಲ್ಲರು ಅರ್ಹ

1,000 ಪೋಷಕ ಲೇಯರ್‌ಗಳು / ವಾರಕ್ಕೆ 3,000 ಮೊಟ್ಟೆ ಮರಿ ಸಾಮರ್ಥ್ಯ / 2,000 ಮರಿಗಳ ಮದರ್ ಯೂನಿಟ್ ಅಗತ್ಯ

ಎರಡು ವರ್ಷಗಳವರೆಗೆ ರಾಜ್ಯ ಅನುಷ್ಠಾನ ಸಂಸ್ಥೆಯಿಂದ ತಾಂತ್ರಿಕ-ಪ್ರಶಿಕ್ಷಣ ಬೆಂಬಲ

ಅರ್ಜಿ ಸಲ್ಲಿಕೆ NLM ಪೋರ್ಟಲ್ ಮೂಲಕ: https://nlm.udyamimitra.in/

ಯೋಜನೆಯ ಉದ್ದೇಶಗಳು

ಸಂಘಟಿತವಲ್ಲದ ಗ್ರಾಮೀಣ ಕೋಳಿ ಸಾಕಾಣಿಕೆಯನ್ನು ಸಂಘಟಿತ ವಲಯಕ್ಕೆ ತರುವುದು, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯಮಶೀಲತೆಯನ್ನು ಮತ್ತು ಆದಾಯವನ್ನು ಹೆಚ್ಚಿಸುವುದು, ಉತ್ಪಾದನೆ-ಮಾರಾಟಕ್ಕಾಗಿ ಮುಂಭಾಗ ಮತ್ತು ಹಿಂಭಾಗದ ಸಂಪರ್ಕಗಳನ್ನು ಬಲಪಡಿಸುವುದು, ಕಡಿಮೆ ವೆಚ್ಚದ ಆಹಾರ ಪದ್ಧತಿಗಳನ್ನು ಪ್ರಚಾರಕ್ಕೆ ತರುವುದು.

ಯೋಜನೆಯ ಪ್ರಮುಖ ಅಂಶಗಳು

1. ಪೋಷಕ ಲೇಯರ್ ಫಾರ್ಮ್‌ಗಳು

ಕನಿಷ್ಠ 1,000 ಪೋಷಕ ಲೇಯರ್‌ಗಳು ಇರಬೇಕು.

2. ಹ್ಯಾಚರಿಗಳು

ವಾರಕ್ಕೆ 3,000 ಮೊಟ್ಟೆಗಳನ್ನು ಮರಿ ಮಾಡಲು ಸಾಮರ್ಥ್ಯ ಇರಬೇಕು.

3. ಮದರ್ ಯೂನಿಟ್‌ಗಳು

ಸುಮಾರು 2,000 ಮರಿಗಳನ್ನು 4 ವಾರಗಳವರೆಗೆ ಪೋಷಿಸುವ ವ್ಯವಸ್ಥೆ ಅಗತ್ಯ.

ರಾಜ್ಯ ಅನುಷ್ಠಾನ ಸಂಸ್ಥೆಯಿಂದ 2 ವರ್ಷಗಳವರೆಗೆ ಮಾರ್ಗದರ್ಶನ, ಮോണಿಟರಿಂಗ್ ಮತ್ತು ತಾಂತ್ರಿಕ ಬೆಂಬಲ ಒದಗಿಸಲಾಗುತ್ತದೆ.

ಯೋಜನೆಯಡಿ ದೊರೆಯುವ ಆರ್ಥಿಕ ಪ್ರಯೋಜನಗಳು

ಯೋಜನಾ ವೆಚ್ಚದ 50% ರಷ್ಟು ಸಹಾಯಧನ (ಗರಿಷ್ಠ ₹25 ಲಕ್ಷ)

ಹೊಸ ಫಾರ್ಮ್ ಸ್ಥಾಪನೆ ಮತ್ತು ವಿಸ್ತರಣೆಗೆ ದೊಡ್ಡ ಮಟ್ಟದ ಬೆಂಬಲ

ಗ್ರಾಮೀಣದಲ್ಲಿ ಉದ್ಯೋಗ ಸೃಷ್ಟಿ ಮತ್ತು ಸ್ಥಳೀಯ ಆರ್ಥಿಕ ಸುಧಾರಣೆ

ತಾಂತ್ರಿಕ ತರಬೇತಿ ಮತ್ತು ವೈಜ್ಞಾನಿಕ ಸಾಕಾಣಿಕೆ ಪದ್ಧತಿಗಳ ಮಾರ್ಗದರ್ಶನ

ಉತ್ಪನ್ನಗಳಿಗೆ ಸದೃಢ ಮಾರುಕಟ್ಟೆ ಸಂಪರ್ಕ

ಸಹಾಯಧನಕ್ಕೆ ಅರ್ಹರು ಯಾರು?

ವೈಯಕ್ತಿಕ ರೈತರು

ಸ್ವಯಂ ಸಹಾಯ ಗುಂಪುಗಳು (SHG)

ರೈತ ಉತ್ಪಾದಕ ಸಂಸ್ಥೆಗಳು (FPO)

ಜಂಟಿ ಹೊಣೆಗಾರಿಕೆ ಗುಂಪುಗಳು

ರೈತ ಸಹಕಾರಿ ಸಂಘಗಳು

ಖಾಸಗಿ ಕಂಪನಿಗಳು ಮತ್ತು ಉದ್ಯಮಿಗಳು

ಕೋಳಿ ವಲಯದಲ್ಲಿ ಕಾರ್ಯನಿರ್ವಹಿಸುವ ಎನ್‌ಜಿಒಗಳು

ಅರ್ಜಿದಾರರಿಗೆ ಅಗತ್ಯವಿರುವ ಮೂಲಭೂತ ಅವಶ್ಯಕತೆಗಳು

ಸ್ವಂತ ಅಥವಾ ಗುತ್ತಿಗೆ ಪಡೆದ ಭೂಮಿ

KYC ದಾಖಲೆಗಳು ಸಂಪೂರ್ಣ

ಬ್ಯಾಂಕ್ ಸಾಲ ಮಂಜೂರಾತಿ ಅಥವಾ ಸ್ವಯಂ ಹಣಕಾಸು ಸಾಕ್ಷ್ಯ

ಸಾಕಾಣಿಕೆ ಕ್ಷೇತ್ರದಲ್ಲಿ ಅನುಭವ ಅಥವಾ ತರಬೇತಿ ಪಡೆದ ಸಿಬ್ಬಂದಿ

ವಿವರವಾದ ಯೋಜನಾ ವರದಿ (DPR)

ಸಹಾಯಧನಕ್ಕೆ ಅರ್ಹವಲ್ಲದ ವೆಚ್ಚಗಳು

ಭೂಮಿ ಖರೀದಿ

ಬಾಡಿಗೆ/ಗುತ್ತಿಗೆ ಪಾವತಿಗಳು

ವೈಯಕ್ತಿಕ ಬಳಕೆ ವಾಹನ

ಕಚೇರಿ ಕಟ್ಟಡದ ವೆಚ್ಚಗಳು

ಸಹಾಯಧನಕ್ಕೆ ಹೇಗೆ ಅರ್ಜಿ ಸಲ್ಲಿಸಬಹುದು?

ಯೋಜನೆ ದೇಶಾದ್ಯಂತ, ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ಜಾರಿಯಲ್ಲಿದೆ.

ಅರ್ಜಿಯ ಹಂತಗಳು:

1. ಆನ್‌ಲೈನ್ ಅರ್ಜಿ:

ರಾಷ್ಟ್ರೀಯ ಜಾನುವಾರು ಮಿಷನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ:

https://nlm.udyamimitra.in/

2. ದಾಖಲೆ ಪರಿಶೀಲನೆ:

ರಾಜ್ಯ ಅನುಷ್ಠಾನ ಸಂಸ್ಥೆ ಅರ್ಜಿಯನ್ನು ಪರಿಶೀಲಿಸುತ್ತದೆ.

3. ಬ್ಯಾಂಕ್/ಹಣಕಾಸು ಸಂಸ್ಥೆಗೆ ಶಿಫಾರಸು:

ಅರ್ಹರಿಗೆ ಸಾಲ ಪಡೆಯಲು SIU ಶಿಫಾರಸು ಮಾಡುತ್ತದೆ.

4. ಬ್ಯಾಂಕ್ ದ್ವಾರಾ ಸಾಲ ಮಂಜೂರಾತಿ:

ಎಲ್ಲಾ ದಾಖಲೆಗಳ ಪರಿಶೀಲನೆಯ ನಂತರ ಸಾಲ ಮಂಜೂರು.

5. ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿ ಅನುಮೋದನೆ

6. ಕೇಂದ್ರ ಸರ್ಕಾರದಿಂದ ಸಬ್ಸಿಡಿ ಅನುಮೋದನೆ

7. ಯೋಜನೆ ಆರಂಭ

8. ಯೋಜನಾ ವೆಚ್ಚದ 25% ಖರ್ಚಿನ ನಂತರ ಸಬ್ಸಿಡಿ ಬಿಡುಗಡೆ

ಸಬ್ಸಿಡಿ ಮೊತ್ತವನ್ನು SIDBI ಮೂಲಕ ಸಾಲ ನೀಡುವ ಬ್ಯಾಂಕ್‌ಗೆ ವರ್ಗಾಯಿಸಲಾಗುತ್ತದೆ, ಅಲ್ಲಿಂದ ಫಲಾನುಭವಿಗೆ ಬಿಡುಗಡೆ ಮಾಡಲಾಗುತ್ತದೆ. ಕೋಳಿ ಸಾಕಾಣಿಕೆ, ಹ್ಯಾಚರಿ ಮತ್ತು ಮದರ್ ಯೂನಿಟ್‌ಗಳಿಗೆ 50% ಸಹಾಯಧನ ನೀಡುವ ಈ ಯೋಜನೆ, ಗ್ರಾಮೀಣ ಉದ್ಯಮಶೀಲತೆಯ ವಿಸ್ತರಣೆಗೆ ಮತ್ತು ಉದ್ಯೋಗ ಸೃಷ್ಟಿಗೆ ಮಹತ್ತರ ಸಾಧ್ಯತೆಯಾಗಿದೆ. ಕಡಿಮೆ ಹೂಡಿಕೆಯಿಂದ ದೊಡ್ಡ ಮಟ್ಟದ ಉತ್ಪಾದನೆ ಸಾಧ್ಯವಾಗುತ್ತಿದ್ದು, ಭಾರತ ಸರ್ಕಾರದ ಕೃಷಿ-ಪಶುಸಂಗೋಪನಾ ವಲಯ ಬಲಪಡಿಸುವ ಗುರಿ ಇದರಿಂದ ಮತ್ತಷ್ಟು ವೇಗ ಪಡೆಯಲಿದೆ.

]]>
Thu, 20 Nov 2025 12:37:57 +0530 shivuagrico
Bele parihara&250 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ,ವಾರದೊಳಗೆ ರೈತರ ಖಾತೆಗೆ ಹಣ ಜಮಾ https://krushirushi.in/Bele-parihara-2282 https://krushirushi.in/Bele-parihara-2282 Bele parihara-250 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ,ವಾರದೊಳಗೆ ರೈತರ ಖಾತೆಗೆ  ಹಣ ಜಮಾ


ಮುಂಗಾರಿನ ಬೆಳೆ ಹಾನಿಗೆ ಎನ್‌ಡಿಆರ್‌ಎಫ್‌ನ ನಿಯಮದಂತೆ, ಪ್ರತಿ ಹೆಕ್ಟೇರ್‌ಗೆ 8500 ರೂ. ಪರಿಹಾರ ನೀಡಬೇಕಿತ್ತು. ಆದರೆ, ಕರ್ನಾಟಕದಲ್ಲಿ ಹಲವು ಜಿಲ್ಲೆಗಳು ಅತಿವೃಷ್ಟಿಗೆ ತುತ್ತಾಗಿದ್ದವು. ಸತತ ಮಳೆಯಿಂದ ಬೆಳೆ ಹಾಳಾಗಿರುವುದನ್ನು ಸೆ.30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದಾಗಿ ತಮ್ಮ ಸಂಪುಟದ ಸಚಿವರೊಂದಿಗೆ ವೀಕ್ಷಣೆ ಮಾಡಿದ್ದರು. ನಂತರ ಎನ್‌ಡಿಆರ್‌ಎಫ್‌ ಪರಿಹಾರದ ಜತೆ ಪ್ರತಿ ಹೆಕ್ಟೇರ್‌ಗೆ 8,500 ರೂ. ಹೆಚ್ಚಿನ ಪರಿಹಾರ ಘೋಷಣೆ ಮಾಡಿ ಹೋಗಿದ್ದರು. ಇದೀಗ ಕೇಂದ್ರ ಮತ್ತು ರಾಜ್ಯ ಸರಕಾರಗಳ ಪರಿಹಾರ ಬಂದಿದೆ. ಇನ್ನೊಂದು ಕಂತಿನಲ್ಲಿಯೂ ಸುಮಾರು 250 ಕೋಟಿ ರೂ. ಪರಿಹಾರ ಬರುವ ಅಂದಾಜಿದೆ.

ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ


ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೀಡಾದ ಮುಂಗಾರಿನ ಬೆಳೆಗೆ ಪರಿಹಾರವಾಗಿ ಮೊದಲ ಕಂತಿನಲ್ಲಿ ಜಿಲ್ಲೆಗೆ 268 ಕೋಟಿ ರೂ. ಮಂಜೂರಾಗಿದೆ. ಕನಿಷ್ಠ ಒಂದು ಹೆಕ್ಟೇರ್‌ ಖುಷ್ಕಿ ಜಮೀನಿನ ಬೆಳೆ ಹಾಳಾದ ಪ್ರತಿ ರೈತರ ಖಾತೆಗೆ 8,500 ರೂ. ಹಣ ಶೀಘ್ರ ಬರಲಿದೆ.

ಮುಂಗಾರಿನ ಆಗಸ್ಟ್‌ ಮತ್ತು ಸೆಪ್ಟೆಂಬರ್‌ನಲ್ಲಿ ಸುರಿದ ಭಾರಿ ಮಳೆ ಹಾಗೂ ಭೀಮೆಯ ನೆರೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿತ್ತು. ನಂತರ ಕಂದಾಯ ಮತ್ತು ಕೃಷಿ ಇಲಾಖೆ ಜಂಟಿ ಸಮೀಕ್ಷೆಯಲ್ಲಿ ಸುಮಾರು 3.07 ಲಕ್ಷ ಹೆಕ್ಟೇರ್‌ ಬೆಳೆ ಹಾಳಾಗಿದೆ ಎಂದು ರಾಜ್ಯ ಸರಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ದವು. ಅದರ ಆಧಾರದ ಮೇಲೆ 4,15,989 ರೈತರಿಗೆ ಮೊದಲ ಹಂತದಲ್ಲಿ ಸುಮಾರು 268.33 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರಕಾರದ ಸಹಯೋಗದಲ್ಲಿ ಮೊದಲ ಹಂತದ ಪರಿಹಾರ ಬಿಡುಗಡೆ ಮಾಡಲಾಗಿದೆ. ಇನ್ನುಳಿದಂತೆ ಎರಡನೇ ಹಂತದ ಹೆಚ್ಚುವರಿ ಪರಿಹಾರವು ಕೂಡ ಶೀಘ್ರ ಬರಲಿದೆ ಎನ್ನುತ್ತಾರೆ ಅಧಿಕಾರಿಗಳು.

ವಾರದೊಳಗೆ ಖಾತೆಗೆ


ಬೆಳೆ ಪರಿಹಾರಕ್ಕೆ ಆಯಾ ತಾಲೂಕುಗಳಲ್ಲಿ ರೈತರ ಅಂತಿಮ ಪಟ್ಟಿ ಪರಿಷ್ಕರಣೆ ಮತ್ತು ತಹಸೀಲ್ದಾರ್‌ ಅಪ್ರೂವಲ್‌ ಕೆಲಸ ನಡೆದಿದೆ. ಎಲ್ಲ ತಾಲೂಕುಗಳಲ್ಲಿ ಅಪ್ರೂವಲ್‌ ಆದ ಕೂಡಲೇ ರೈತರ ಖಾತೆಗೆ ಪರಿಹಾರ ಹಣದ ವರ್ಗಾವಣೆ ಶುರುವಾಲಿದೆ. ಕನಿಷ್ಠ ಒಂದು ವಾರದೊಳಗೆ ಎಲ್ಲ ಪ್ರಕ್ರಿಯೆ ಮುಗಿದು ಹಣ ಜಮಾ ಶುರುವಾಗಲಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸುತ್ತಾರೆ.

]]>
Thu, 20 Nov 2025 07:55:44 +0530 shivuagrico
Pmkisan 21st instalment&ನನ್ನ ಖಾತೆಗೆ ಪಿಎಂ ಕಿಸಾನ್ 21ನೇ ಕಂತಿನ ಹಣ ಜಮಾ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Pmkisan-21st-instalment-2281 https://krushirushi.in/Pmkisan-21st-instalment-2281 Pmkisan 21st instalment-ನನ್ನ ಖಾತೆಗೆ ಪಿಎಂ ಕಿಸಾನ್ 21ನೇ ಕಂತಿನ ಹಣ ಜಮಾ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/

ಮೊದಲು know your status ಮೇಲೆ ಕ್ಲಿಕ್ ಮಾಡಿ

ನಂತರ know your register number ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ

ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.

ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ

ನಂತರ update your details ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ

 Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.

ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ

Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.

FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ  ಕಾರಣ ಮತ್ತು ಪರಿಹಾರ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

fruitspmk.gov.in ಪೋರ್ಟಲ್ ನಲ್ಲಿ

1

ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ

ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು                                                                     ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು

ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ  (NIC)                     ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ.            ಆ) ಸಮಸ್ಯಾತ್ಮಕ  ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ.

2

ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು

ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ

ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ    ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ

3

ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು

 ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ

ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ   ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ

4

ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ

ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ

OPERATOR ಲಾಗಿನ್ (RSK, ADA office, JDA office)  OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು

5

01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ

ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ

ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ)

6

Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು

ಜಿಲ್ಲೆಗಳಲ್ಲಿ  OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ

AAO ಲಾಗಿನ್  (RSK, ADA office, JDA office)  AAO ಲಾಗಿನ್ನಲ್ಲಿ  ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ,  ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

7

ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ

ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ)

AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.

8

PFMS rejected

Aadhaar Number is not seeded in NPCI

ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ

Bank Name And IFSC Code are not related to each other

ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ

Bank Name is not as per PFMS Bank Master.

Beneficiary is rejected as Account Type is other than SB / SBA / JD

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ)

Duplicate Beneficiary Name , Bank Account No and Bank Name not allowed for same scheme

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

IFSC Code  either not present or currently inactive in tbl BankBranch

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

Incorrect Aadhaar Number

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

One or more mandatory tags values are missing.

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

Rejected by Bank, Account No does not exist in Bank/INVALID/CLOSED

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

9

Amount credited to Account Number-NA

Aadhaar number based payment by GoI

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ.

10

PAYMENT STOPPED BY STATE

 XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳಿದ್ದರೆ ಕೇಂದ್ರ ಕಚೇರಿ ಮಾಹಿತಿ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

11

Transaction failed

ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ.

12

ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ

OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳ   ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

13

ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು

ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ.

ಕೇಂದ್ರ ಸರ್ಕಾರ ದ   pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ.

]]>
Wed, 19 Nov 2025 22:02:36 +0530 shivuagrico
Shakthi Chandramarutha&ಶಕ್ತಿ ಚಂಡಮಾರುತ ಎಫೆಕ್ಟ್,ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ https://krushirushi.in/Shakthi-Chandramarutha-2280 https://krushirushi.in/Shakthi-Chandramarutha-2280 Shakthi Chandramarutha-ಶಕ್ತಿ ಚಂಡಮಾರುತ ಎಫೆಕ್ಟ್,ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ


ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ 'ಶಕ್ತಿ' ಚಂಡಮಾರುತದಿಂದ ರಾಜ್ಯದಲ್ಲಿ ವಾರಪೂರ್ತಿ ಗುಡುಗು ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಉತ್ತರ ಕರ್ನಾಟಕ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.5ರಿಂದ 11ರವರೆಗೆ ಗುಡುಗು ಸಹಿತ ಮಳೆಯಾಗಲಿದೆ.

ಈ ಅವಧಿಯಲ್ಲಿ ಕೆಲವೆಡೆ ಮಳೆಗಿಂತ ಬಿರುಗಾಳಿ ಹೆಚ್ಚು ಇರಲಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.5ರಿಂದ 10ರವರೆಗೆ ಉತ್ತಮ ಮಳೆಯಾಗಲಿದೆ. ಈ ಅವಧಿಯಲ್ಲಿ ಕೆಲವೆಡೆ ಮಳೆಗಿಂತ ಬಿರುಗಾಳಿ ಜಾಸ್ತಿ ಇರಲಿದೆ ಎಂದು ಇಲಾಖೆ ಮಾಹಿತಿ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್. ಗದಗ, ಹಾವೇರಿ, ಕೊಪ್ಪಳ, ಯಾದಗಿರಿಯಲ್ಲಿ ಭಾರಿ ಮಳೆಯಾಗಲಿದೆ. ಮುಂದಿನ ಒಂದು ವಾರ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಂಭವ ಇದ್ದು, ಇಂದಿನಿಂದ 5 ದಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೀದ‌ರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಯಲ್ಲಿ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ.

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ, ಸಂಜೆ ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ ಸುತ್ತಮುತ್ತ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಘಟ್ಟದ ಕೆಳಗಿನ ಪ್ರದೇಶಗಳ ಸುತ್ತಮುತ್ತ ಮಳೆಯ ಸಾಧ್ಯತೆ ಇದೆ.

ಈಗಿನಂತೆ ಒಕ್ಟೊಬರ್ 6 ಮತ್ತು 7ರಂದು ಕರಾವಳಿಯಲ್ಲಿ ಮಳೆ ಬಿಡುವು ಪಡೆದರೂ, 8ರಿಂದ ದಕ್ಷಿಣ ಕನ್ನಡ ಹಾಗೂ 9ರಿಂದ ಇತರ ಕರಾವಳಿ ಜಿಲ್ಲೆಗಳಲ್ಲಿಯೂ ಸಂಜೆಯ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೋಡ ಅಥವಾ ಸಂಜೆ ಗುಡುಗು ಸಹಿತ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 5ರಿಂದ ಮಲೆನಾಡು ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, 8 ರಿಂದ ಗುಡುಗು ಸಹಿತ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿ ತನಕ ಸಾಗಿ ಮತ್ತೆ ತಿರುಗಿ ಗುಜರಾತ್ ಕರಾವಳಿ ಕಡೆ ಪಯಣಿಸುವ ಸೂಚನೆಗಳಿವೆ.

]]>
Sun, 05 Oct 2025 08:39:49 +0530 shivuagrico
ಮಳೆಯಿಂದ ಬೆಳೆ ಹಾನಿ: ಒಂದು ಎಕರೆ ಪ್ರದೇಶಕ್ಕೆ ₹25 ಸಾವಿರ ಪರಿಹಾರಕ್ಕೆ ನಿಖಿಲ್ ಕುಮಾರಸ್ವಾಮಿ ಒತ್ತಾಯ https://krushirushi.in/Bela-hani-parihar https://krushirushi.in/Bela-hani-parihar ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಳೆಯಿಂದಾಗಿ ರೈತರ ಬೆಳೆಗಳು ಸಂಪೂರ್ಣ ನೆಲ ಕಚ್ಚಿವೆ. ಸರ್ಕಾರ ಈ ಕೂಡಲೇ ಮಧ್ಯ ಪ್ರವೇಶಿಸಿ ಒಂದು ಎಕರೆ ಪ್ರದೇಶ ಬೆಳೆ ನಾಶಕ್ಕೆ ₹25000 ಪರಿಹಾರ ಘೋಷಿಸಬೇಕೆಂದು ನಿಖಿಲ್ ಕುಮಾರಸ್ವಾಮಿ ಗಂಭೀರವಾಗಿ ಒತ್ತಾಯಿಸಿದರು.

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ಬರೀ ಘೋಷಣೆಗೆ ಮಾತ್ರ ಸೀಮಿತವಾಗಿದೆ

ಈ ಸರ್ಕಾರ ಬರೀ ಘೋಷಣೆಗೆ ಮಾತ್ರ ಸೀಮಿತವಾಗಿದೆ. ಅಭಿವೃದ್ಧಿ ಮಾಡುವಲ್ಲಿ ಈ ಸರ್ಕಾರ ವಿಫಲವಾಗಿದೆ. ಘೋಷಿಸಿದ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಸರ್ಕಾರದ ಖಜಾನೆಯಲ್ಲಿ ದುಡ್ಡ ಇದಿಯೋ, ಇಲ್ಲವೋ ಸರ್ಕಾರನೇ ಉತ್ತರಿಸಬೇಕೆಂದು ನಿಖಿಲ್ ಅವರು ಆಗ್ರಹಿಸಿದರು.

ಕೆಕೆಆರ್ ಡಿ ಬಿ ಯ ಕೆಲಸಗಳನ್ನು ಶೇ 30% ಗೆ ಲ್ಯಾಂಡರ್ಮಿಗೆ ಮಾರಿಕೊಂಡಿದ್ದಾರೆ.KKRDB ಇರೋದು ದುಡ್ಡು ಮಾಡಕ್ಕೆ. ಕಮಿಷ ನಡೆಯೋಕೆ. ಪರ್ಸೆಂಟೇಜ್ ರಾಜಕಾರಣಕ್ಕೆ ಇಟ್ಟಿರುವುದು. ಅಭಿವೃದ್ಧಿ ವಿಷಯ ಬಂದಾಗ ಕೆಕೆಆರ್ ಡಿಬಿ ಹೆಸರನ್ನು ಮುಂದೆ ಇಡುತ್ತಾರೆ ಎಂದು ಆರೋಪಿಸಿದರು.

ಕಲ್ಯಾಣ ಕರ್ನಾಟಕದಲ್ಲಿ ಕಲ್ಯಾಣ ಆಗ್ತಿಲ್ಲ, ರಸ್ತೆಗಳೆಲ್ಲ ಗುಂಡಿಗಳು ಬಿದ್ದಿವೆ

ಕಲ್ಬುರ್ಗಿ ನಗರದ ರಸ್ತೆಗಳೆಲ್ಲ ಗುಂಡಿಗಳು ಬಿದ್ದಿವೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5000 ಕೊಟ್ಟಿದೆ ಅಂತ ಹೇಳ್ತಾರೆ. ಕಲ್ಬುರ್ಗಿಯ ರಸ್ತೆಗಳನ್ನು ನಿರ್ಮಿಸುವುದನ್ನು ಬಿಡಿ. ಗುಂಡಿಗಳನ್ನು ಮುಚ್ಚುವ ಕೆಲಸ ಕಲ್ಬುರ್ಗಿಯಿಂದ ಆರಂಭಿಸಲಿ ಎಂದು ಸರ್ಕಾರ ವಿರುದ್ಧ ಗುಡುಗಿದರು.

ಇಡೀ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಸರ್ಕಾರಿ ಹಾಗೂ ಖಾಸಗಿ ಆಸ್ತಿ ಹಾಳು ಮಾಡಿದೆ. ಜನ ಜಾನುವಾರುಗಳ ಮೇವು ಕೂಡ ಪರಿಣಾಮ ಆಗಿದೆ. ರೈತರ ಮೇಲೆ ಮಳೆ ದೊಡ್ಡ ಮಟ್ಟದಲ್ಲಿ ಕಾಡುತ್ತಿದೆ. ಆಗಸ್ಟ್ ತಿಂಗಳಲ್ಲಿ ಬಾರಿ ಮಳೆ ಆಗಿದೆ. 1ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ತೊಗರಿ ಉದ್ದು ಹೆಸರು ಮತ್ತಿತರ ಬೆಳೆಗಳು ಹಾಳಗಿದೆ ಎಂದು ತಿಳಿಸಿದರು.

]]>
Mon, 22 Sep 2025 15:21:13 +0530 shivuagrico
ಕರ್ನಾಟಕ ರೈತರಿಗೆ ಕೇಂದ್ರದ ದಸರಾ ಕೊಡುಗೆ: 5 ಧಾನ್ಯಗಳಿಗೆ ಕೇಂದ್ರದ ಬೆಂಬಲ ಬೆಲೆ ಖರೀದಿಗೆ ಅನುಮತಿ https://krushirushi.in/Approval-for-Procurement-of-5-Foodgrains-at-MSP https://krushirushi.in/Approval-for-Procurement-of-5-Foodgrains-at-MSP MSP Purchase approval to Five grains : ಹೆಸರು, ಉದ್ದು, ಶೇಂಗಾ, ಸೋಯಾಬಿನ್‌, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿಯನ್ನು ನೀಡಿದೆ. ಈ ಸಂಬಂಧ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕರ್ನಾಟಕ ಸರ್ಕಾರಕ್ಕೆ ಪತ್ರವನ್ನು ಬರೆದಿದ್ದಾರೆ. ಅತಿವೃಷ್ಟಿಯಿಂದ ತತ್ತರಿಸಿರುವ ರೈತರಿಗೆ ಇದರಿಂದ ಅನುಕೂಲವಾಗಲಿದೆ.

ಹೊಸದಿಲ್ಲಿ / ಬೆಂಗಳೂರು : ಅತಿವೃಷ್ಟಿಯಿಂದಾಗಿ ತತ್ತರಿಸಿದ್ದ ಕರ್ನಾಟಕದ ರೈತರ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರ, ಇದೀಗ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಸೆ ಮೇರೆಗೆ ನವರಾತ್ರಿ ಕೊಡುಗೆಯಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಅನುಮತಿ ನೀಡಿದೆ.

2025-26ನೇ ಸಾಲಿನ ಮುಂಗಾರಿನಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ(ಶೇಂಗಾ), ಸೋಯಾಬಿನ್‌ ಮತ್ತು ಸೂರ್ಯಕಾಂತಿ ಧಾನ್ಯಗಳನ್ನು ಕೇಂದ್ರದ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಕುರಿತು ಕೇಂದ್ರ ಕೃಷಿ ಸಚಿವರು ಆಹಾರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಖುದ್ದು ಪತ್ರ ಬರೆದು ಮಾಹಿತಿ ನೀಡಿದ್ದಾರೆ.

ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ಸ್ಪಂದಿಸಿದ ಪ್ರಧಾನಿ ಮೋದಿ ಅವರು ತಕ್ಷಣವೇ ಕರ್ನಾಟಕದ ರೈತರ ನೆರವಿಗೆ ಮುಂದಾಗುವಂತೆ ತಿಳಿಸಿದ್ದರು. ಅಂತೆಯೇ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್‌ ಚೌಹಾಣ್ ಅವರು ತಮ್ಮ ಮನವಿಗೆ ತ್ವರಿತ ಸ್ಪಂದನೆ ನೀಡಿ ರಾಜ್ಯದ ರೈತರ ನೆರವಿಗೆ ಧಾವಿಸಿದ್ದಾರೆ. ಈ ಬೆಳೆಗಾರರ ಹಿತದೃಷ್ಟಿಯಿಂದ ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಸಹ ನೀಡಿದ್ದಾರೆ.

ಯಾವುದೆಷ್ಟು ಖರೀದಿಗೆ ಕೇಂದ್ರ ಅಸ್ತು?: ಕೇಂದ್ರ ಸರ್ಕಾರ, ಬೆಂಬಲ ಬೆಲೆ ಯೋಜನೆಯಡಿ 2025-26ನೇ ಸಾಲಿನಲ್ಲಿ ಕರ್ನಾಟಕದಿಂದ 38000 ಮೆಟ್ರಿಕ್‌ ಟನ್‌ ಹೆಸರು ಕಾಳು, 60,810 MT ಉದ್ದು, 15,650 MT ಸೂರ್ಯಕಾಂತಿ, 61,148 MT ಕಡಲೆಬೀಜ ಮತ್ತು 1,15,000 MT ಸೋಯಾಬಿನ್ ಖರೀದಿಗೆ ಅನುಮತಿ ನೀಡಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಜಿಲ್ಲಾವಾರು ಖರೀದಿ ಕೇಂದ್ರಕ್ಕೆ ಜೋಶಿ ಒತ್ತಾಯ: ಕೇಂದ್ರ ಸರ್ಕಾರ, ಕರ್ನಾಟಕದ ರೈತರಿಗೆ ಕಲ್ಪಿಸಿರುವ ಈ ಬೆಂಬಲ ಬೆಲೆ ಯೋಜನೆ ನೆರವನ್ನು ರಾಜ್ಯ ಸರ್ಕಾರ ತ್ವರಿತವಾಗಿ ಒದಗಿಸಬೇಕು. ಈ ಕೂಡಲೇ ರಾಜ್ಯಾದ್ಯಂತ ಜಿಲ್ಲಾವಾರು ಖರೀದಿ ಕೇಂದ್ರಗಳನ್ನು ತೆರೆದು ಧಾನ್ಯಗಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ.

ಪ್ರಧಾನಿ ಮತ್ತು ಕೃಷಿ ಸಚಿವರಿಗೆ ಜೋಶಿ ಧನ್ಯವಾದ: ಕರ್ನಾಟಕದ ರೈತರ ಸಂಕಷ್ಟ ಅರಿತು ಈ ಮೂಲಕ ನೆರವಿಗೆ ಧಾವಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್‌ ಚೌಹಾಣ್ ಅವರಿಗೆ ಸಚಿವ ಪ್ರಲ್ಹಾದ ಜೋಶಿ ರಾಜ್ಯದ ರೈತರ ಪರವಾಗಿ ಧನ್ಯವಾದ ಸಹ ಅರ್ಪಿಸಿದ್ದಾರೆ.

]]>
Mon, 22 Sep 2025 09:37:34 +0530 shivuagrico
Bele sala manna&ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ https://krushirushi.in/Bele-sala-manna-2277 https://krushirushi.in/Bele-sala-manna-2277 Bele sala manna-ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್

ಬೆಳೆ ಹಾನಿ ಹಿನ್ನೆಲೆಯಲ್ಲಿ ರೈತರು ಸಾಲ
ಮನ್ನಾ ಮಾಡುವಂತೆ ಕೇಳುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬೆಳೆಹಾನಿ ಹಿನ್ನೆಲೆಯಲ್ಲಿ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.


ವಾರದಲ್ಲಿ ಜಂಟಿ ಸಮೀಕ್ಷೆಯ ಅಂತಿಮ ವರದಿ ಬಂದ ಬಳಿಕ ಬೆಳೆ ಹಾನಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಈ ಬಾರಿ ಉತ್ತಮ ಮಳೆಯಾಗಿದ್ದು, ಉತ್ತಮ ಬೆಳೆಗಳ ನಿರೀಕ್ಷೆಯಿತ್ತು. ಆದರೆ, ಯಾದಗಿರಿ, ಕಲಬುರಗಿ, ಬೀದ‌ರ್ ಸೇರಿ ಹಲವು ಕಡೆ ಬೆಳೆ ಹಾನಿಯಾಗಿದೆ. ಕಳೆದ ಬಾರಿ ಬೆಳೆ ಹಾನಿ ಬಗ್ಗೆ ವರದಿ ಕಳಿಸಿದಾಗ ಕೇಂದ್ರ ಸರ್ಕಾರ ಪರಿಹಾರ ನೀಡಿರಲಿಲ್ಲ. ನಾವು ಸುಪ್ರೀಂ ಕೋರ್ಟ್ ಗೆ ಹೋಗಿ ಪರಿಹಾರ ಪಡೆದುಕೊಂಡೆವು. ಈ ಬಾರಿ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ. ಆದರೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಆರೋಪಿಸಿದ್ದಾರೆ. ಬೆಳೆ ಹಾನಿ ಹಿನ್ನೆಲೆಯಲ್ಲಿ ರೈತರು ಸಾಲಮನ್ನಾ ಬಗ್ಗೆ ಮನವಿ ಮಾಡಿರುವುದು ಗಮನದಲ್ಲಿದ್ದು, ಅದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

Sala manna-ರೈತರ ಸಾಲಮನ್ನಾದ 300 ಕೋಟಿ ಬಾಕಿ ತಿರಿಸುತ್ತೇವೆ-ಸಿಎಂ ಸಿದ್ದರಾಮಯ್ಯ

ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ರೈತರ ಸಾಲ ಮನ್ನಾ (Loan Waiver) ಮಾಡಿ ಬಾಕಿ ಉಳಿಸಿದ್ದ 300 ಕೋಟಿ ಹಣವನ್ನು ಕಾಂಗ್ರೆಸ್ ಸರ್ಕಾರ ಮುಂದಿನ ದಿನದಲ್ಲಿ ತೀರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಹಕಾರ ಸಚಿವ ಕೆಎನ್ ರಾಜಣ್ಣ ಅವರ 75ನೇ ವರ್ಷದ ‘ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಹೆಸರು ಪಡೆದುಕೊಂಡರು. ಆದರೆ ಬಾಕಿಯನ್ನು ನಮ್ಮ ಸರ್ಕಾರ ತೀರಿಸಬೇಕಾಗಿದೆ. ಹೆಸರು ಅವರಿಗೆ, ಹೊರೆ ಹೊತ್ತುಕೊಂಡಿದ್ದು ನಮ್ಮ ಸರ್ಕಾರ ಎಂದರು.

2018 ರಿಂದ ಇಲ್ಲಿಯವರೆಗೂ ಕರ್ನಾಟಕದಲ್ಲಿ ಯಾರಿಗೆಲ್ಲಾ ಎಷ್ಟು ಸಾಲ ಮನ್ನಾ ಆಗಿದೆ? ಹಾಗಾದರೆ ಯಾವ ಬಾಕಿ ರೈತರ ಸಾಲಮನ್ನಾ ಆಗಲಿದೆ,ಸಾಲಮನ್ನಾ ಆಗಲು ಬೇಕಾದ ದಾಖಲೆ ಹಾಗೂ ಅರ್ಹತೆಗಳೇನು? ಹೀಗೆ ಚೆಕ್ ಮಾಡಿ-Bele sala manna status 

2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಇದ್ದಾಗ ರಾಜ್ಯದ ರೈತರ ಸಾಲಮನ್ನಾ(Bele sala manna) ಮಾಡಿದ್ದರು.ಆದರೆ ಅದರಲ್ಲಿ ಕೇಲವು ರೈತರ ದಾಖಲೆಗಳ ಕೊರತೆಯಿಂದಾಗಿ ಬಾಕಿ ಉಳಿದ ಪ್ರಕರಣಗಳಲ್ಲಿ ದಾಖಲಾತಿಗಳನ್ನು ಸಲ್ಲಿಸಿದ ನಂತರ ಸಾಲಮನ್ನಾ ಆಗುತ್ತಿದೆ.ಹಾಗಾದರೆ ಈ ಲೇಖನದಲ್ಲಿ ಯಾವೆಲ್ಲಾ ದಾಖಲಾತಿಗಳು ಬೇಕಾಗಬಹುದು ಎಂದು ಚೆಕ್ ಮಾಡಬಹುದು.

ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

ನಂತರ "Revenue department/ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು"(Revenue department services)ಮೇಲೆ ಕ್ಲಿಕ್ ಮಾಡಿ

ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ"(farmer) ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು"(Submit)ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ(Crop loan wavier) ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ(Bele sala manna list) ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ

ನಂತರ "CLWS ರೈತನ ಅರ್ಹತೆ" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್(bank) select ಮಾಡಿ,ಸಲ್ಲಿಸು/Submit ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ(crop loan wavier) ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ

]]>
Sun, 21 Sep 2025 09:03:08 +0530 shivuagrico
Karnataka Rain: ವಾಯುಭಾರ ಕುಸಿತದ ಎಫೆಕ್ಟ್‌; ಈ ಜಿಲ್ಲೆಗಳಲ್ಲಿ ಇಂದು ರಣಭೀಕರ ಮಳೆ https://krushirushi.in/Rain-alert-2276 https://krushirushi.in/Rain-alert-2276 ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕದಲ್ಲಿಯೂ ಪರಿಣಾಮ ಬೀರುತ್ತಿದೆ. ಕಳೆದ ನಾಲ್ಕು ದಿನಗಳಿಂದ ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ, ಒಳನಾಡಿನ ಹಲವು ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತ ಸಂಭವಿಸಿರುವ ಕಾರಣ ರಾಜ್ಯದಲ್ಲಿ ಮುಂದಿನ 5 ದಿನಗಳ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈಋತ್ಯ ಮಾನ್ಸೂನ್ ಮಾರುತಗಳು, ಮರಾಠವಾಡದ ಮೇಲಿನ ಮೇಲಿನ ವಾಯು ಚಂಡಮಾರುತದ ಪರಿಚಲನೆಯು ಈಗ ದಕ್ಷಿಣ ಮರಾಠವಾಡ ಮತ್ತು ನೆರೆಹೊರೆಯ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ. ಎತ್ತರದಲ್ಲಿದೆ. ಉತ್ತರ-ದಕ್ಷಿಣ ತಗ್ಗು ಈಗ ದಕ್ಷಿಣ ಉತ್ತರ ಪ್ರದೇಶದ ಮಧ್ಯ ಭಾಗಗಳಿಂದ ಮಧ್ಯಪ್ರದೇಶ, ಮರಾಠವಾಡಕ್ಕೆ ಸಾಗುತ್ತದೆ. ಇದು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ. ವರೆಗೆ ವಿಸ್ತರಿಸುತ್ತದೆ.

ಉತ್ತರ ಅಂಡಮಾನ್ ಸಮುದ್ರ ಮತ್ತು ಪಕ್ಕದ ಮ್ಯಾನ್ಮಾರ್ ಕರಾವಳಿಯಲ್ಲಿ ಮೇಲಿನ ವಾಯು ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ. ವರೆಗೆ ವಿಸ್ತರಿಸಿದೆ. ಉತ್ತರ ಅಂಡಮಾನ್ ಸಮುದ್ರ ಮತ್ತು ಪಕ್ಕದ ಮ್ಯಾನ್ಮಾರ್ ಕರಾವಳಿಯ ಮೇಲೆ ವಾಯು ಚಂಡಮಾರುತದ ಮೇಲಿನಿಂದ ಮಧ್ಯ ಬಂಗಾಳಕೊಲ್ಲಿ, ದಕ್ಷಿಣ ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾ ಮತ್ತು ಉತ್ತರ ಒಳನಾಡಿನ ಕರ್ನಾಟಕದಾದ್ಯಂತ ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ ಎತ್ತರದಲ್ಲಿ ವಾಯುಭಾರ ಕುಸಿತ ಹರಡಿದೆ.

]]>
Sat, 20 Sep 2025 11:11:03 +0530 shivuagrico
ಕೃಷಿ ಸಾಲ ಮನ್ನಾ ಪ್ರಸ್ತಾವನೆ ಪರಿಶೀಲಿಸುತ್ತೇನೆ: ಬೆಳೆ ನಷ್ಟದಲ್ಲಿರುವ ರೈತರಿಗೆ ಸಿಎಂ ಭರವಸೆ https://krushirushi.in/Reviewing-proposal-for-crop-loan-waiver-amid-crop-losses https://krushirushi.in/Reviewing-proposal-for-crop-loan-waiver-amid-crop-losses ಸಹಕಾರಿ ಸಂಘಗಳು/ಬ್ಯಾಂಕ್‌ಗಳಿಂದ ರೈತರು ಪಡೆದ ಸಾಲವನ್ನು ಮನ್ನಾ ಮಾಡುವ ಪ್ರಸ್ತಾವನೆ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಈ ಬಾರಿಯ ಮಳೆಗಾಲದಲ್ಲಿ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ರೈತರು ಭಾರಿ ಬೆಳೆ ನಷ್ಟ ಅನುಭವಿಸಿದ್ದಾರೆ

."ಕೆಲವು ಸಂಘಟನೆಗಳು ಸಹಕಾರಿ ಸಂಘಗಳು/ಬ್ಯಾಂಕ್‌ಗಳಿಂದ ರೈತರು ಪಡೆದಿರುವ ಕೃಷಿ ಸಾಲಗಳನ್ನು ಮನ್ನಾ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿವೆ. ಸರ್ಕಾರ ಈ ಪ್ರಸ್ತಾವನೆಯನ್ನು ಪರಿಶೀಲಿಸಲಿದೆ ಎಂದು ಹೇಳಿದರು.

ಬೆಳೆ ನಷ್ಟ ಪರಿಹಾರದ ಕುರಿತು, ಜಿಲ್ಲೆಗಳಲ್ಲಿ ಕಂದಾಯ ಮತ್ತು ಕೃಷಿ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸುತ್ತಿದ್ದು, ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ಬಳಿಕ ಪರಿಹಾರ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಕಳೆದ ವರ್ಷ ಕರ್ನಾಟಕ ಸರ್ಕಾರ ಮನವಿ ಪತ್ರ ಸಲ್ಲಿಸುವಲ್ಲಿ ವಿಳಂಬ ಮಾಡಿದೆ ಎಂಬ ಕೇಂದ್ರದ ಆರೋಪಗಳನ್ನು ಸಿಎಂ ನಿರಾಕರಿಸಿದರು. ನಮ್ಮ ಪಾಲಿನ ಪರಿಹಾರಕ್ಕಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಲಾಗಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾಗ ಮುಖ್ಯಮಂತ್ರಿಗಳು ನಂತರ ಕಲಬುರಗಿ ತಾಲ್ಲೂಕಿನ ಫರ್ತಾಬಾದ್‌ನಲ್ಲಿರುವ ಕೃಷಿ ಭೂಮಿಗೆ ಭೇಟಿ ನೀಡಿದರು. ಈ ವೇಳೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಮತ್ತು ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರಣಮ್ ಅವರು ಬೆಳೆ ನಷ್ಟದ ಬಗ್ಗೆ ಸಿಎಂಗೆ ವಿವರಿಸಿದರು.

ಈ ಮಧ್ಯೆ, ಜಿಲ್ಲಾ ಕೃಷಿ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಡಂಗಾಪುರ್ ಅವರು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಈ ಋತುವಿನಲ್ಲಿ ಭಾರಿ ಮಳೆಯಾಗಿದ್ದರಿಂದ ರೈತರು ಮೂರು ಬಾರಿ ತೊಗರಿ ಕೃಷಿ ಮಾಡಿದ್ದಾರೆ. ಆದರೆ ತೊಗರಿ, ಹಸಿರು ಮತ್ತು ಉದ್ದಿನ ಬೇಳೆ ಸೇರಿದಂತೆ ಎಲ್ಲಾ ಬೆಳೆಗಳು ಮಳೆಯಿಂದಾಗಿ ಹಾನಿಗೊಳಗಾಗಿವೆ. ಬೆಳೆ ನಷ್ಟಕ್ಕೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು. ರಬಿ ಹಂಗಾಮಿಗೆ ಬೀಜ ಮತ್ತು ರಸಗೊಬ್ಬರಗಳ ಮೇಲೆ ಸಬ್ಸಿಡಿ ನೀಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಳೆ ನಿಂತ ತಕ್ಷಣ, ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಅಂತಿಮ ಸಮೀಕ್ಷೆ ನಡೆಸುತ್ತಾರೆ. ಜಂಟಿ ಸಮೀಕ್ಷಾ ವರದಿ ಬಂದ ನಂತರ, ಸರ್ಕಾರ ಪರಿಹಾರ ಬಿಡುಗಡೆಗೆ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

]]>
Thu, 18 Sep 2025 10:29:49 +0530 shivuagrico
ಅಂತರ್ಜಾತಿ 5 ಲಕ್ಷದವರೆಗೆ ಸಹಾಯಧನ ವಿವಾಹಿತರಿಗಾಗಿ ಸರ್ಕಾರ ನೀಡುವ ಸೌಲಭ್ಯಗಳು: ಸಂಪೂರ್ಣ ಮಾಹಿತಿ ಇಲ್ಲಿದೆ https://krushirushi.in/Intercaste-marriage-funds https://krushirushi.in/Intercaste-marriage-funds ಅಂತರ್ಜಾತೀಯ  ವಿವಾಹವನ್ನು ಉತ್ತೇಜಿಸಲು ರಾಜ್ಯ ಸರ್ಕಾರ ವಿವಾಹ ಪ್ರೋತ್ಸಾಹ ಧನ ಯೋಜನೆ ಜಾರಿಗೆ ತಂದಿದೆ. 

ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಸಮುದಾಯದವರನ್ನು ಬೇರೆ ವರ್ಗದ ವ್ಯಕ್ತಿ ವಿವಾಹವಾದರೆ ಆ ದಂಪತಿಗಳಿಗೆ ₹5.50 ಲಕ್ಷ ಪ್ರೋತ್ಸಾಹ ಧನವನ್ನು ನೀಡಲಾಗುವುದು.

ವಧುವಿಗೆ ₹3ಲಕ್ಷ ಹಾಗೂ ವರನಿಗೆ ₹2.5ಲಕ್ಷ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಅರ್ಹತೆಗಳು

ದಂಪತಿಗಳು ಕರ್ನಾಟಕದಲ್ಲಿ ವಾಸಿಸುತ್ತಿರಬೇಕು

ಜೋಡಿಗಳು ಹಿಂದೂ ಧರ್ಮದವರಾಗಿರಬೇಕು

ಒಬ್ಬ ಸಂಗಾತಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದರೆ, ಇನ್ನೊಬ್ಬರು ಬೇರೆ ಸಮುದಾಯಕ್ಕೆ ಸೇರಿರಬೇಕು

ದಂಪತಿಗಳ ಒಟ್ಟು ವಾರ್ಷಿಕ ಆದಾಯ ₹5ಲಕ್ಷಕ್ಕಿಂತ ಕಡಿಮೆ ಇರಬೇಕು

ವಿವಾಹವಾಗಿ 18 ತಿಂಗಳ ಒಳಗಾಗಿ ಅರ್ಜಿ ಸಲ್ಲಿಸಿದವರು ಮಾತ್ರ ಯೋಜನೆಗೆ ಅರ್ಹರು

ಅರ್ಜಿ ಸಲ್ಲಿಸುವ ಪ್ರಕ್ರಿಯೆ

ಹಂತ 1: ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

https://swdservices.karnataka.gov.in/SWIncentive/ICM/ICMHome.aspx

ಹಂತ 2: 'ವಿವಾಹಕ್ಕೆ ಪ್ರೋತ್ಸಾಹ ಧನ' ಎಂಬ ಗುಂಡಿಯನ್ನು ಒತ್ತಿ. ನಂತರ 'ಅಂತರ್-ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ' ಯೋಜನೆಯನ್ನು ಆಯ್ಕೆಮಾಡಿ.

 

ಹಂತ 3: ಯೋಜನೆಯ ಮುಖಪುಟದಲ್ಲಿ, ಕೆಳ ಭಾಗದಲ್ಲಿರುವ ನೋಂದಣಿಯನ್ನು ಆರಿಸಿ

 

ಹಂತ 4: ಅರ್ಜಿಯಲ್ಲಿ ಆಧಾರ್ ಕಾರ್ಡ್ ವಿವರ ತುಂಬಿದ ಬಳಿಕ ನೋಂದಣಿಯಲ್ಲಿ ಕ್ಯಾಪ್ಚಾ ನಮೂದಿಸಿ..

 

ಹಂತ 5: ಅರ್ಜಿಯ ಎಲ್ಲಾ ಕ್ಷೇತ್ರಗಳನ್ನು ಭರ್ತಿ ಮಾಡಿ. ಕೇಳಿರುವ ದಾಖಲೆಗಳನ್ನು ನಿಖರ ಗಾತ್ರದಲ್ಲಿ ನಮೂದಿಸಿ. ನೀವು ಒದಗಿಸಿದ ಎಲ್ಲಾ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ. ಅರ್ಜಿ ಪೂರ್ಣಗೊಂಡ ಬಳಿಕ "ಸಲ್ಲಿಸು" ಎಂಬುವುದನ್ನು ಒತ್ತಿ.

 

ನಂತರ ನೀವು ಇಲಾಖೆಯಿಂದ ಎಸ್‌ಎಂಎಸ್ ಮೂಲಕ ದೃಢೀಕರಣ ಸಂದೇಶವನ್ನು ಸ್ವೀಕರಿಸುತ್ತೀರಿ

ಹಂತ 6: ಉಲ್ಲೇಖಕ್ಕಾಗಿ ಸ್ವೀಕೃತಿ ನಮೂನೆಯ ಮುದ್ರಣವನ್ನು ತೆಗೆದುಕೊಳ್ಳಿ

ಅಗತ್ಯವಿರುವ ದಾಖಲೆಗಳು

*ಆಧಾರ್ ಕಾರ್ಡ್

*ಬ್ಯಾಂಕ್ ಖಾತೆ ವಿವರಗಳು

*ವಿವಾಹ ನೋಂದಣಿ ಪ್ರಮಾಣಪತ್ರ

*ಮದುವೆ ಭಾವಚಿತ್ರ

*ಆದಾಯ ಪ್ರಮಾಣಪತ್ರ

*ಜಾತಿ ಪ್ರಮಾಣಪತ್ರ

*ನಿವಾಸ ಪುರಾವೆ

ಅಗತ್ಯವಿರುವ ಯಾವುದೇ ಇತರ ದಾಖಲೆಗಳು

]]>
Wed, 17 Sep 2025 12:40:19 +0530 shivuagrico
ಕರ್ನಾಟಕ ದಂತ ಭಾಗ್ಯ ಯೋಜನೆ: ದಂತಪಂಕ್ತಿ ಅಳವಡಿಕೆಗೆ ಸರ್ಕಾರದಿಂದ 3000 ರೂ. ನೆರವು; ಯಾರೆಲ್ಲಾ ಅರ್ಹರು? https://krushirushi.in/Karnataka-Danta-Bhagya-Scheme:-₹3,000-Government-Assistance-for-Denture-Installation--Who-is-Eligible https://krushirushi.in/Karnataka-Danta-Bhagya-Scheme:-₹3,000-Government-Assistance-for-Denture-Installation--Who-is-Eligible

ಕರ್ನಾಟಕ ದಂತ ಭಾಗ್ಯ ಯೋಜನೆ: ದಂತಪಂಕ್ತಿ ಅಳವಡಿಕೆಗೆ ಸರ್ಕಾರದಿಂದ 3000 ರೂ. ನೆರವು; ಯಾರೆಲ್ಲಾ ಅರ್ಹರು?

ಹಲ್ಲಿದ್ದವನಿಗೆ ಕಡಲೆಯಿಲ್ಲ, ಕಡಲೆಯಿದ್ದವನಿಗೆ ಹಲ್ಲಿಲ್ಲ ಎಂಬ ಗಾದೆ ಮಾತನ್ನು ಕೇಳಿರುತ್ತೀರಿ. ಹಾಗೆಯೇ ವಯಸ್ಸಾಂತೆ ಹಾಳಾದ ಹಲ್ಲುಗಳನ್ನು ಬದಲಿಸಿ ಕೃತಕ ಹಲ್ಲುಗಳನ್ನು ಹಾಕಿಸಿಕೊಳ್ಳಬೇಕಾಗುತ್ತದೆ. ಅದರೆ, ಇವು ಬಲು ದುಬಾರಿ ಎಂಬ ಕಾರಣಕ್ಕೆ ಬಡವರಿಗೆ ಅಗ್ಗದ ದರದಲ್ಲಿ ದಂತ ಚಿಕಿತ್ಸೆ ಒದಗಿಸುವ ದಂತ ಭಾಗ್ಯ ಅಥವಾ ದಂದಪಂಕ್ತಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಯೋಜನೆಯಡಿ ಕರ್ನಾಟಕ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸೇರಿದ ಹಿರಿಯ ನಾಗರಿಕರಿಗೆ ಉಚಿತ ಮತ್ತು ಸಬ್ಸಿಡಿಯಲ್ಲಿ ದಂತಗಳನ್ನು ಒದಗಿಸುತ್ತದೆ. ಈ ಹಿನ್ನೆಲೆಯಲ್ಲಿ ಏನಿದು ದಂತ ಭಾಗ್ಯ ಯೋಜನೆ? ಈ ಯೋಜನೆಯಡಿ ಹಲ್ಲಿನ ಚಿಕಿತ್ಸೆಗೆ ಎಷ್ಟು ವೆಚ್ಚವಾಗಲಿದೆ? ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ ಎಂಬುದನ್ನು ತಿಳಿಯೋಣ.

ಯೋಜನೆಯ ಪ್ರಮುಖ ಲಕ್ಷಣಗಳು ಮತ್ತು ಪ್ರಯೋಜನಗಳು

ವಿಸ್ತೃತ ವಯೋಮಿತಿ: ಈ ಯೋಜನೆಯ ಪ್ರಮುಖ ಬದಲಾವಣೆಯೆಂದರೆ, ಅರ್ಹತಾ ವಯಸ್ಸನ್ನು 60 ವರ್ಷದಿಂದ 45 ವರ್ಷಕ್ಕೆ ಇಳಿಸಲಾಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಬಡ ನಾಗರಿಕರಿಗೆ ಯೋಜನೆಯ ಲಾಭ ಪಡೆಯಲು ಅವಕಾಶ ಸಿಗಲಿದೆ.

ಹೆಚ್ಚಿದ ಆರ್ಥಿಕ ನೆರವು: ಸಂಪೂರ್ಣ ದಂತಪಂಕ್ತಿಗೆ ನೀಡಲಾಗುತ್ತಿದ್ದ ಆರ್ಥಿಕ ನೆರವನ್ನು 2,000 ರೂ. ದಿಂದ 3,000 ರೂ.ಗೆ ಹೆಚ್ಚಿಸಲಾಗಿದೆ. ಭಾಗಶಃ ದಂತಪಂಕ್ತಿಗೆ ನೀಡಲಾಗುತ್ತಿದ್ದ 1,000 ರೂ. ಆರ್ಥಿಕ ನೆರವನ್ನು ಮುಂದುವರಿಸಲಾಗಿದೆ. ದಂತಪಂಕ್ತಿ ತಯಾರಿಕೆಗೆ ಹೆಚ್ಚುತ್ತಿರುವ ವೆಚ್ಚಗಳನ್ನು ಪರಿಗಣಿಸಿ ಈ ಬದಲಾವಣೆಗಳನ್ನು ಮಾಡಲಾಗಿದೆ.

ಉಚಿತ ದಂತಪಂಕ್ತಿಗಳು: ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ದಂತ ಚಿಕಿತ್ಸೆಯನ್ನು ಸುಲಭವಾಗಿ ಪಡೆಯಲು ಈ ಯೋಜನೆ ಸಹಕಾರಿಯಾಗಿದೆ. ದಂತಪಂಕ್ತಿಗಳ ಬೆಲೆ ಸಾಮಾನ್ಯವಾಗಿ ಹೆಚ್ಚಿರುವುದರಿಂದ, ಯೋಜನೆಯು ಬಡವರಿಗೆ ದಂತ ಚಿಕಿತ್ಸೆ ಪಡೆಯಲು ಅನುಕೂಲ ಮಾಡಿಕೊಡಲಿದೆ.

ಆರೋಗ್ಯ ಸುಧಾರಣೆ: ಸರಿಯಾಗಿ ಅಗಿಯುವ ಸಾಮರ್ಥ್ಯವನ್ನು ಮರಳಿ ಪಡೆಯುವುದರಿಂದ ಪೋಷಣೆ ಸುಧಾರಿಸಿ, ಒಟ್ಟಾರೆ ಆರೋಗ್ಯ ಉತ್ತಮಗೊಳ್ಳುತ್ತದೆ. ಹಾಳಾದ ಹಲ್ಲುಗಳು ಆರೋಗ್ಯವು ಅಪೌಷ್ಟಿಕತೆ ಮತ್ತು ಇತರ ಕಾಯಿಲೆಗಳಿಗೆ ಕಾರಣವಾಗಬಹುದು.

ವ್ಯಾಪಕ ಪ್ರವೇಶಸಾಧ್ಯತೆ: ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮೂಲಕ, ಈ ಯೋಜನೆ ರಾಜ್ಯದಾದ್ಯಂತ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿರುವ ಸರ್ಕಾರಿ ಮತ್ತು ಖಾಸಗಿ ದಂತ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ ಮೂಲಕ ತನ್ನ ಸೇವೆಗಳನ್ನು ವಿಸ್ತರಿಸಿದೆ.

ಮನೆಬಾಗಿಲಿಗೆ ಸೇವೆಗಳು: ಕೆಲವು ಗ್ರಾಮೀಣ ಪ್ರದೇಶಗಳಲ್ಲಿ, ವೃದ್ಧರಿಗೆ ಪ್ರಯಾಣಿಸಲು ಕಷ್ಟವಾಗುವುದರಿಂದ, ದಂತ ಶಿಬಿರಗಳನ್ನು ಆಯೋಜಿಸಿ ದಂತಪಂಕ್ತಿ ಸೇವೆಗಳನ್ನು ಅವರ ಗ್ರಾಮಗಳಲ್ಲೇ ಒದಗಿಸಲಾಗುತ್ತದೆ.

ಸಂಪರ್ಕ ಮತ್ತು ಗುರುತಿಸುವಿಕೆ: ಆಶಾ (ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆ) ಕಾರ್ಯಕರ್ತರು ಅಗತ್ಯವಿರುವ ಹಿರಿಯ ನಾಗರಿಕರನ್ನು ಗುರುತಿಸಿ ದಂತ ವೈದ್ಯಕೀಯ ಕಾಲೇಜುಗಳಿಗೆ ಉಲ್ಲೇಖಿಸಲು ಸಹಾಯ ಮಾಡುತ್ತಾರೆ.

ಬಾಯಿ ಸ್ವಚ್ಛತೆ ಕುರಿತು ಶಿಕ್ಷಣ: ದಂತಪಂಕ್ತಿಗಳನ್ನು ನೀಡುವುದರ ಜೊತೆಗೆ, ಬಾಯಿ ಸ್ವಚ್ಛತೆ ಮತ್ತು ಸಾಮಾನ್ಯ ಬಾಯಿಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಸಹ ಈ ಯೋಜನೆ ಸಹಕಾರಿಯಾಗಿದೆ.

ದಂತ ಭಾಗ್ಯ ಯೋಜನೆಗೆ ಯಾರೆಲ್ಲಾ ಅರ್ಹರು?

ಕರ್ನಾಟಕ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗಾಗಿ ಜಾರಿಗೆ ತಂದಿರುವ ದಂತ ಭಾಗ್ಯ ಯೋಜನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಈ ಬದಲಾವಣೆಗಳಿಂದಾಗಿ ಹೆಚ್ಚಿನ ಸಂಖ್ಯೆಯ ಜನರು ಯೋಜನೆಯ ಲಾಭ ಪಡೆಯಲು ಅರ್ಹರಾಗಿದ್ದಾರೆ. ವಯಸ್ಸಿನ ಮಿತಿ ಇಳಿಕೆ: ಯೋಜನೆಯಡಿ ದಂತಪಂಕ್ತಿ ಪಡೆಯಲು ಈ ಹಿಂದೆ ನಿಗದಿಪಡಿಸಿದ್ದ ವಯಸ್ಸಿನ ಮಿತಿ 60 ವರ್ಷವಾಗಿತ್ತು. ಈಗ ಈ ಮಿತಿಯನ್ನು 45 ವರ್ಷಕ್ಕೆ ಇಳಿಸಲಾಗಿದೆ. ಇದರಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಬಿಪಿಎಲ್ ಕಾರ್ಡ್ ಹೊಂದಿರುವ ವ್ಯಕ್ತಿಗಳು ಕೂಡ ಉಚಿತ ದಂತಪಂಕ್ತಿಗಳನ್ನು ಪಡೆಯಬಹುದು.

(ಮರು ಸಿಂಚನ ಯೋಜನೆಯ ಬಗ್ಗೆ ತಿಳಿಯಿರಿ)

ಸರ್ಕಾರದಿಂದ ಆರ್ಥಿಕ ನೆರವು ಹೆಚ್ಚಳ

ಯೋಜನೆಯಡಿಯಲ್ಲಿ ದಂತಪಂಕ್ತಿಗಳ ತಯಾರಿಕೆಗೆ ತಗಲುವ ವೆಚ್ಚ ಹೆಚ್ಚಿರುವುದರಿಂದ, ಸರ್ಕಾರವು ನೀಡುವ ಸಹಾಯಧನವನ್ನು ಪರಿಷ್ಕರಿಸಿದೆ. ಆಸ್ಪತ್ರೆ/ ಕಾಲೇಜುಗಳಿಗೆ ಗುಣಮಟ್ಟದ ದಂತಪಂಕ್ತಿಯನ್ನು ನೀಡಲು ಪ್ರತಿ ರೋಗಿಗೆ 500 ರೂ.ನಿಂದ 750 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. 'ಪ್ರತಿ ಸಂಪೂರ್ಣ ದಂತ ಪಂಕ್ತಿಗೆ 750.00 ರೂ.ರಿಂದ 2000.00 ರೂ. ಗಳಿಗೆ ಹಾಗೂ ಭಾಗಶಃ ದಂತಪಂಕ್ತಿಗೆ 300.00 ರೂ. ರಿಂದ 1000 ರೂ.ಗಳಿಗೆ ಹೆಚ್ಚಿಸಲಾಗಿದೆ. ಈ ವೆಚ್ಚವನ್ನ ಸರ್ಕಾರವೇ ಭರಸಲಿದೆ. ಇದರಿಂದ ಉತ್ತಮ ಗುಣಮಟ್ಟದ ಸೇವೆ ಪಡೆಯಲು ಸಾಧ್ಯವಾಗುತ್ತದೆ. ಈ ಬದಲಾವಣೆಗಳು ದಂತಭಾಗ್ಯ ಯೋಜನೆಯನ್ನು ಹೆಚ್ಚು ಜನಸ್ನೇಹಿಯಾಗಿಸಿವೆ. ಈ ಪ್ರಮುಖ ಬದಲಾವಣೆಗಳಿಂದಾಗಿ ದಂತ ಭಾಗ್ಯ ಯೋಜನೆಯು ಹೆಚ್ಚಿನ ಅರ್ಹ ನಾಗರಿಕರಿಗೆ ಲಾಭ ಒದಗಿಸಲಿದೆ.

ಪರಿಷ್ಕೃತ ದರ

ಸಂಪೂರ್ಣ ದಂತಪಂಕ್ತಿ: ಈ ಮೊದಲು 2,000 ರೂ. ನೀಡಲಾಗುತ್ತಿತ್ತು, ಈಗ ಇದನ್ನು 3,000 ರೂ.ಗೆ ಹೆಚ್ಚಿಸಲಾಗಿದೆ.

ಭಾಗಶಃ ದಂತಪಂಕ್ತಿ: ಈ ಮೊದಲು 1,000 ರೂ. ನೀಡಲಾಗುತ್ತಿತ್ತು, ಈ ಸಹಾಯಧನವನ್ನು ಮುಂದುವರಿಸಲಾಗಿದೆ.

]]>
Wed, 17 Sep 2025 10:40:27 +0530 shivuagrico
ದುಡಿಮೆಗಾಗಿ ವಾಹನ ಖರೀದಿಸಲು ಶೇ 75ರಷ್ಟು ಸಹಾಯಧನ: ಅರ್ಜಿ ಸಲ್ಲಿಸುವ ಬಗೆ ಹೇಗೆ? https://krushirushi.in/75-Subsidy-for-Buying-Vehicles-for-Livelihood:-How-to-Apply https://krushirushi.in/75-Subsidy-for-Buying-Vehicles-for-Livelihood:-How-to-Apply ಯೋಜನೆ ಅಡಿ ಶೇ 50 ರಿಂದ ಶೇ 75 ರಷ್ಟು ಸಹಾಯಧನ ದೊರೆಯಲಿದೆ. ಫಲಾನುಭವಿಗಳು ಪ್ರಯಾಣಿಕ ಆಟೋ ರಿಕ್ಷಾ, ಸರಕು ಸಾಗಣಿಕೆಯ ವಾಹನ ಅಥವಾ ಟ್ಯಾಕ್ಸಿ ಖರೀದಿಗಾಗಿ ಬ್ಯಾಂಕುಗಳಿಂದ ವಾಹನದ ಬೆಲೆಯ ಶೇ 50 ರಷ್ಟು ಅಥವಾ ಗರಿಷ್ಠ ₹3 ಲಕ್ಷದ ವರೆಗೂ ಸಹಾಯಧನ ಪಡೆಯಬಹುದು.

ರಾಜ್ಯ ಸರ್ಕಾರದ ಹಲವು ಅಭಿವೃದ್ಧಿ ಯೋಜನೆಗಳಲ್ಲಿ ಸ್ವಾವಲಂಬಿ ಸಾರಥಿ ಯೋಜನೆಯೂ ಒಂದಾಗಿದೆ.

ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಯುವಜನತೆಗೆ ಉದ್ಯೋಗ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಇದರಲ್ಲಿ ವಾಣಿಜ್ಯ ಉಪಯೋಗಗಳಿಗಾಗಿ ವಾಹನ ಖರೀದಿಗೆ ಹಾಗೂ ಹೊಸ ಉದ್ಯಮಗಳ ಆರಂಭಕ್ಕೆ ಸಹಾಯಧನವನ್ನು ನೀಡಲಾಗುತ್ತದೆ.

ಈ ಯೋಜನೆಯಡಿ ಶೇ 50 ರಿಂದ ಶೇ 75 ರಷ್ಟು ಸಹಾಯಧನ ದೊರೆಯಲಿದೆ. ಫಲಾನುಭವಿಗಳು ಪ್ರಯಾಣಿಕ ಆಟೋ ರಿಕ್ಷಾ, ಸರಕು ಸಾಗಣಿಕೆಯ ವಾಹನ ಅಥವಾ ಟ್ಯಾಕ್ಸಿ ಖರೀದಿಗಾಗಿ ಬ್ಯಾಂಕುಗಳಿಂದ ವಾಹನದ ಬೆಲೆಯ ಶೇ 50 ರಷ್ಟು ಅಥವಾ ಗರಿಷ್ಠ ₹3 ಲಕ್ಷದ ವರೆಗೂ ಸಹಾಯಧನ ಪಡೆಯಬಹುದು.

ಈ ಯೋಜನೆಯನ್ನು ಪಡೆಯುವುದು ಹೇಗೆ? ಅಗತ್ಯ ಅರ್ಹತೆಗಳೇನು ಎಂಬ ಮಾಹಿತಿ ಇಲ್ಲಿದೆ....

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿದೆ ಆಕರ್ಷಕ ಬಡ್ಡಿ: ಹೂಡಿಕೆ ಮಾಡುವುದು ಹೇಗೆ? ಯೋಜನೆಗೆ ಸಂಬಂಧಿಸಿದ ಮಾರ್ಗಸೂಚಿಗಳೇನು?

ಈ ಯೋಜನೆಯನ್ನು ರಾಜ್ಯಸರ್ಕಾರವು ರಾಷ್ಟ್ರೀಕೃತ ಬ್ಯಾಂಕ್‍ಗಳ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತದೆ.

ಮಹಿಳೆಯರಿಗೆ ಆದ್ಯತೆಯನ್ನು ನೀಡಲಾಗುವುದು.

ಈ ಯೋಜನೆಯಡಿ ಖರೀದಿಸಿದ ವಾಹನವನ್ನು ಸಾಲದ ಅವಧಿ ಮುಗಿಯುವವರೆಗೂ ಇತರರಿಗೆ ಮಾರಾಟ ಮಾಡುವಂತಿಲ್ಲ.

ವಾಹನ ಖರೀದಿಯ ನಂತರ ಅದರಿಂದ ಬರುವ ಆದಾಯದ ವಾರ್ಷಿಕ ವಿವರ, ತೆರಿಗೆ ಪಾವತಿ ಹಾಗೂ ವಿಮೆ ಪಾವತಿಯ ವಿವರಗಳನ್ನು ಜಿಲ್ಲಾ ಕಚೇರಿಗೆ ಸಲ್ಲಿಸುವುದು.

ವಾಹನದ ಮೇಲೆ ಕೆಎಂಡಿಸಿ 'ಸಹಾಯಧನ ಪಡೆದಿದೆ' ಎಂದು ನಮೂದಿಸುವುದು ಕಡ್ಡಾಯ.

ಪ್ಯಾಸೆಂಜರ್‌ ಆಟೋರಿಕ್ಷಗಳಿಗೆ ಪರ್ಮಿಟ್ ಕಡ್ಡಾಯ.

ಯಾರೆಲ್ಲಾ ಈ ಯೋಜನೆಗೆ ಅರ್ಹರು?

ಈ ಯೋಜನೆಯಲ್ಲಿ ಸಾಲ ಸೌಲಭ್ಯ ಪಡೆಯುವವರು ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು.

ಅರ್ಜಿದಾರರು ಲಘುವಾಹನ ಚಾಲನಾ ಪರವಾನಿಗೆಯನ್ನು ಹೊಂದಿರುವುದು ಕಡ್ಡಾಯ.

ಕುಟುಂಬದ ಆದಾಯ ₹6 ಲಕ್ಷ ಮೀರಬಾರದು.

ಕರ್ನಾಟಕದ ನಿವಾಸಿಯಾಗಿರಬೇಕು.

ಅರ್ಜಿದಾರನ ವಯೋಮಿತಿ 18 ರಿಂದ 55 ವರ್ಷಗಳೊಳಗೆ ಇರಬೇಕು.

ರಾಜ್ಯ ಸರ್ಕಾರದ ಯಾವುದೇ ಯೋಜನೆಯಡಿ ಸಾಲ ಸೌಲಭ್ಯ ಪಡೆದಿರಬಾರದು.

ಸ್ಥಳೀಯ ರಾಷ್ಟೀಕೃತ ಬ್ಯಾಂಕಿನಲ್ಲಿ ಆಧಾರ್ ಸಂಯೋಜನೆಯಾಗಿರುವ ಬ್ಯಾಂಕ್ ಖಾತೆಯನ್ನು ಅರ್ಜಿದಾರರು ಹೊಂದಿರಬೇಕು.

ತೃತೀಯ ಲಿಂಗಿ ಹಾಗೂ ಮಹಿಳೆಯರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.

ವಾಹನಗಳನ್ನು ಬಾಡಿಗೆ ಉದ್ದೇಶಗಳಿಗಾಗಿ ಮಾತ್ರ ಬಳಸಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕುಟುಂಬಸ್ಥರು ಸರ್ಕಾರಿ ಉದ್ಯೋಗದಲ್ಲಿ ಇರಬಾರದು

ಅರ್ಜಿಸಲ್ಲಿಸಲು ಅಗತ್ಯ ದಾಖಲೆಗಳೇನು? ಯಾರಿಗೆಲ್ಲ ಸಿಗಲಿದೆ ಭಾಗ್ಯಲಕ್ಷ್ಮಿಯ ಫಲ? ಏನೆಲ್ಲಾ ಲಾಭ, ಅರ್ಹತೆಗಳೇನು?

ಆನ್‌ಲೈನ್‌ ಮೂಲಕ ಆರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು ಯಾವುವು ಎಂಬ ಪಟ್ಟಿ ಇಲ್ಲಿದೆ.

ಇತ್ತೀಚಿನ 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ.

ಜಾತಿ, ಆದಾಯ ಪ್ರಮಾಣ ಪತ್ರ.

ಆಧಾರ್ ಕಾರ್ಡ್ ಪ್ರತಿ.

ವಾಹನ ಚಾಲನ ಪರವಾನಗಿ ಪ್ರಮಾಣ ಪತ್ರ.

ಅರ್ಜಿದಾರರ ಮತ್ತು ಕುಟುಂಬದ ಸದಸ್ಯರು ವಾಹನ ಖರೀದಿಗೆ ರಾಜ್ಯ ಸರ್ಕಾರದ ಯಾವುದೇ ಯೋಜನೆಯಡಿ ಸಾಲ ಸೌಲಭ್ಯ ಪಡೆದಿಲ್ಲದಿರುವ ಬಗ್ಗೆ ಜಿಲ್ಲಾಧಿಕಾರಿಗಳಿಂದ ದೃಢೀಕರಣ ಪತ್ರ.

ಈ ಯೋಜನೆಯಡಿ ಪಡೆದ ವಾಹನವನ್ನು ಅವಧಿಗೆ ಮುನ್ನ ಯಾರಿಗೂ ಮಾರಾಟ ಮಾಡುವುದಿಲ್ಲ ಎಂಬ ದೃಢೀಕರಣ ಪತ್ರ.

ಸಾಲದ ಮರುಪಾವತಿ ಹೇಗೆ?

ಈ ಯೋಜನೆಯಲ್ಲಿ ಬ್ಯಾಂಕುಗಳಿಂದ ಪಡೆದ ಸಾಲವನ್ನು ಬ್ಯಾಂಕುಗಳು ನಿಗದಿ ಪಡಿಸುವ ಕಂತುಗಳಲ್ಲಿ ಪಾವತಿ ಮಾಡಬೇಕಾಗುತ್ತದೆ. ಅನುದಾನ ಹೊರೆತು ಪಡಿಸಿ ಉಳಿದ ಅಸ‍ಲು ಮತ್ತು ಬಡ್ಡಿಯ ಹಣವನ್ನು ಮಾಸಿಕವಾಗಿ ಮರುಪಾವತಿ ಮಾಡಬೇಕು.

ಯೋಜನೆ ಕುರಿತ ಹೆಚ್ಚಿನ ಮಾಹಿತಿ ಪಡೆಯಲು ಸರ್ಕಾರದ ಅಧಿಕೃತ ಅಂತರ್ಜಾಲ ತಾಣಕ್ಕೆ ಭೇಟಿ ನೀಡಬಹುದು.

]]>
Tue, 16 Sep 2025 13:12:22 +0530 shivuagrico
ರಾಜ್ಯದ 5 ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆಹಾನಿಗೆ ಶೀಘ್ರ ಪರಿಹಾರ: ಸಿಎಂ ಸಿದ್ದರಾಮಯ್ಯ https://krushirushi.in/Relief-for-Crop-Loss-Across-5-Lakh-Hectares-in-the-State:-CM-Siddaramaiah https://krushirushi.in/Relief-for-Crop-Loss-Across-5-Lakh-Hectares-in-the-State:-CM-Siddaramaiah ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಾಜ್ಯದಲ್ಲಿ ಐದು ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆಯಾದ ಕೂಡಲೇ ಬೆಳೆಹಾನಿಗೆ ರಾಜ್ಯ ಸರ್ಕಾರ ಪರಿಹಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಲ್ಲಿಯ ಕೃಷಿ ವಿಶ್ವವಿದ್ಯಾಲಯದ ಆವರಣದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಈ ಮುಂಗಾರು ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ರಾಜ್ಯದ 80 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ವಾಡಿಕೆಗಿಂತ ಕೆಲವು ಕಡೆಗಳಲ್ಲಿ ಹೆಚ್ಚಿನ ಮಳೆಯಾದ ಹಿನ್ನಲೆಯಲ್ಲಿ ಅಂದಾಜು 5 ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆಗಳು ಹಾನಿಯಾಗಿವೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಜಂಟಿ ಸಮೀಕ್ಷೆ ನಡೆಯುತ್ತಿದ್ದು, ಕೂಡಲೇ ಬೆಳೆ ಪರಿಹಾರ ಒದಗಿಸಲಾಗುವುದು ಎಂದರು. ಪ್ರಸ್ತುತ ಹಾಲು ಉತ್ಪಾದನೆಯಲ್ಲಿ ಗುಜರಾತ ಮೊದಲ ಸ್ಥಾನ ಹಾಗೂ ಕರ್ನಾಟಕ 2ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ 1 ಕೋಟಿ ಲೀಟರ್‌ ಹಾಲು ಉತ್ಪಾದನೆಯಾಗುತ್ತಿದ್ದು, ಬರುವ ದಿನಗಳಲ್ಲಿ ಮೊದಲ ಸ್ಥಾನಕ್ಕೆ ಬರಬೇಕಿದೆ. ರೈತರು ಕೃಷಿಯೊಂದಿಗೆ ಹೈನುಗಾರಿಕೆ, ತೋಟಗಾರಿಕೆ, ತರಕಾರಿ ಬೆಳೆಗಳನ್ನು ಮಾಡುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕೆಂದ ಮುಖ್ಯಮಂತ್ರಿಗಳು, ಪ್ರಸ್ತುತ ದೈಹಿಕ ಶ್ರಮ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಎಲ್ಲರಿಗೂ ಸಕ್ಕರೆ ಕಾಯಿಲೆ ಬರುತ್ತಿದೆ.

ಸಿರಿಧಾನ್ಯಗಳನ್ನು ಬೆಳೆಯಲಿ

ಆದ್ದರಿಂದ ಸಕ್ಕರೆ ಪ್ರಮಾಣ ಕಡಿಮೆ ಇರುವ ಸಿರಿಧಾನ್ಯಗಳನ್ನು ರೈತರು ಬೆಳೆಯಲು ಸರ್ಕಾರ ಪ್ರೋತ್ಸಾಹಿಸುತ್ತಿದ್ದು, ರೈತರು ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಿ ಎಂದರು. ಕರ್ನಾಟಕದಲ್ಲಿ ಶೇ. 40ಕ್ಕಿಂತ ಕಡಿಮೆ ಪ್ರದೇಶ ನೀರಾವರಿ ಹೊಂದಿದೆ. ಇನ್ನುಳಿದ ಶೇ. 60ರಷ್ಟು ಮಳೆಯಾಶ್ರಿತ ಕೃಷಿಭೂಮಿಯಾಗಿದ್ದು, ಕೃಷಿ ವಿವಿ ಅಂತಹ ಸಂಸ್ಥೆಗಳು ಮಳೆಯಾಶ್ರಿತ ಪ್ರದೇಶದಲ್ಲಿ ಯಾವ ಬೆಳೆಗಳನ್ನು ಉತ್ಕೃಷ್ಟವಾಗಿ ಬೆಳೆಯಬೇಕೆಂದು ಸಂಶೋಧನೆ ಮಾಡಿ ಅದನ್ನು ರೈತರಿಗೆ ಮುಟ್ಟಿಸುವ ಕೆಲಸ ಇನ್ನೂ ಹೆಚ್ಚು ಮಾಡಬೇಕಿದೆ. ಹೆಚ್ಚು ಸಂಶೋಧನೆ ಹಾಗೂ ತಾಂತ್ರಿಕತೆಗಳನ್ನು ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಕೃಷಿ ವಿವಿ ಕಾರ್ಯ ಮಾಡಲಿ ಎಂದರು.

ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌, ವಿಪ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಎನ್‌.ಎಚ್‌. ಕೋನರಡ್ಡಿ, ಅಬ್ಬಯ್ಯ ಪ್ರಸಾದ, ಎಫ್‌.ಎಚ್‌. ಜಕ್ಕಪ್ಪನವರ, ಶ್ರೀನಿವಾಸ ಮಾನೆ, ವಿಜಯಾನಂದ ಕಾಶಪ್ಪನವರ, ಹೆಸ್ಕಾಂ ಅಧ್ಯಕ್ಷ ಅಜೀಮ್‌ ಪೀರ ಖಾದ್ರಿ, ಹು-ಡಾ ಅಧ್ಯಕ್ಷ ಶಾಕೀರ ಸನದಿ ಸೇರಿದಂತೆ ಅನೇಕರು ಇದ್ದರು. ಕೃಷಿ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಪಿ.ಎಲ್. ಪಾಟೀಲ ಸ್ವಾಗತಿಸಿದರು. ಕೃಷಿಯಲ್ಲಿ ಸಾಧನೆ ಮಾಡಿದವರಿಗೆ ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಟ ಕೃಷಿಕ ಮಹಿಳೆ ಪ್ರಶಸ್ತಿಯನ್ನು ಇದೇ ಸಂದರ್ಭದಲ್ಲಿ ಪ್ರದಾನ ಮಾಡಲಾಯಿತು.

]]>
Tue, 16 Sep 2025 10:26:29 +0530 shivuagrico
ITR ಸಲ್ಲಿಸುವ ಗಡುವು ವಿಸ್ತರಿಸಿಲ್ಲ, ಇಂದೇ ಕೊನೆಯ ದಿನ : 'ಆದಾಯ ತೆರಿಗೆ ಇಲಾಖೆ' ಸ್ಪಷ್ಟನೆ | ITR deadline extension https://krushirushi.in/It-filing-deadline-extension https://krushirushi.in/It-filing-deadline-extension 2024-25ರ ಆರ್ಥಿಕ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. ಇನ್ನೂ ತಮ್ಮ ರಿಟರ್ನ್ಸ್ ಸಲ್ಲಿಸದ ಅನೇಕ ತೆರಿಗೆದಾರರು ಕೊನೆಯ ನಿಮಿಷದ ವಿಸ್ತರಣೆಯನ್ನು ಆಶಿಸುತ್ತಿರಬಹುದು.

ಆದಾಗ್ಯೂ, ಗಡುವನ್ನು ಮತ್ತಷ್ಟು ವಿಸ್ತರಿಸಲಾಗುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ಅಧಿಕೃತ ಕೊನೆಯ ದಿನಾಂಕ ಸೆಪ್ಟೆಂಬರ್ 15, 2025 ಆಗಿದೆ. ಸಾಮಾಜಿಕ ಮಾಧ್ಯಮ ಮತ್ತು ಮೆಸೇಜಿಂಗ್ ಅಪ್ಲಿಕೇಶನ್ಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ನಕಲಿ ಸಂದೇಶದ ಬಗ್ಗೆ ತೆರಿಗೆದಾರರಿಗೆ ಎಚ್ಚರಿಕೆ ನೀಡುವ ಅಧಿಸೂಚನೆಯನ್ನು ಇಲಾಖೆ ಹೊರಡಿಸಿದೆ. ಐಟಿಆರ್ ಸಲ್ಲಿಸುವ ಗಡುವನ್ನು ಸೆಪ್ಟೆಂಬರ್ 30, 2025 ರವರೆಗೆ ವಿಸ್ತರಿಸಲಾಗಿದೆ ಎಂದು ಸುಳ್ಳು ಸಂದೇಶದಲ್ಲಿ ಹೇಳಲಾಗಿದೆ.

ಆದಾಯ ತೆರಿಗೆ ಇಲಾಖೆಯು ಈ ತಪ್ಪು ಮಾಹಿತಿಯನ್ನು ದೃಢವಾಗಿ ತಿರಸ್ಕರಿಸಿತು ಮತ್ತು ತೆರಿಗೆದಾರರಿಗೆ @IncomeTaxIndia ಅಧಿಕೃತ ನವೀಕರಣಗಳನ್ನು ಮಾತ್ರ ಅವಲಂಬಿಸುವಂತೆ ನೆನಪಿಸಿತು.

ಆನ್ಲೈನ್ನಲ್ಲಿ ಪ್ರಸಾರವಾಗುತ್ತಿರುವ ನಕಲಿ ನೋಟಿಸ್ನಲ್ಲಿ "ಸಿಬಿಡಿಟಿ 15ನೇ ಸೆಪ್ಟೆಂಬರ್ 2025 ರೊಳಗೆ ಐಟಿಆರ್ ಸಲ್ಲಿಸಬೇಕಿದ್ದ ಅಂತಿಮ ದಿನಾಂಕವನ್ನು ವಿಸ್ತರಿಸಿದೆ" ಎಂದು ತಪ್ಪಾಗಿ ಹೇಳಲಾಗಿದೆ. ಇಂತಹ ಸುಳ್ಳು ಸಂದೇಶಗಳನ್ನು ನಿರ್ಲಕ್ಷಿಸುವಂತೆ ಆದಾಯ ತೆರಿಗೆ ಇಲಾಖೆ ತೆರಿಗೆದಾರರಿಗೆ ಸೂಚಿಸಿದೆ.

ಇನ್ನೂ ಸಲ್ಲಿಸದಿರುವವರಿಗೆ, ನಿಮ್ಮ ಐಟಿಆರ್ ಸಲ್ಲಿಸಲು ಸರಳವಾದ ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ:

ನಿಮ್ಮ ಪ್ಯಾನ್ ಅನ್ನು ಬಳಕೆದಾರ ಐಡಿ ಮತ್ತು ಪಾಸ್ ವರ್ಡ್ ಆಗಿ ಬಳಸಿಕೊಂಡು ಅಧಿಕೃತ ಆದಾಯ ತೆರಿಗೆ ಪೋರ್ಟಲ್ ಗೆ ಲಾಗ್ ಇನ್ ಮಾಡಿ.

ಐಟಿಆರ್ ಫೈಲಿಂಗ್ ವಿಭಾಗಕ್ಕೆ ನ್ಯಾವಿಗೇಟ್ ಮಾಡಿ.

ಸರಿಯಾದ ಮೌಲ್ಯಮಾಪನ ವರ್ಷವನ್ನು ಆಯ್ಕೆ ಮಾಡಿ.

ನಿಮ್ಮ ಫೈಲಿಂಗ್ ಸ್ಥಿತಿಯನ್ನು ಆರಿಸಿ.

ಸರಿಯಾದ ಐಟಿಆರ್ ಫಾರ್ಮ್ ಅನ್ನು ಆರಿಸಿ.

ಎಲ್ಲಾ ವಿವರಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ.

ಅನ್ವಯಿಸಿದರೆ ಯಾವುದೇ ತೆರಿಗೆ ಬಾಕಿಯನ್ನು ಪಾವತಿಸಿ.

ರಿಟರ್ನ್ ಸಲ್ಲಿಸಿ.

ಫೈಲಿಂಗ್ ಅನ್ನು ಮೌಲ್ಯೀಕರಿಸಲು 30 ದಿನಗಳ ಒಳಗೆ ರಿಟರ್ನ್ ಅನ್ನು ಇ-ಪರಿಶೀಲಿಸಿ.

ಆದಾಯ ತೆರಿಗೆ ಇಲಾಖೆಯು ತೆರಿಗೆದಾರರಿಗೆ ಸಹಾಯ ಮಾಡಲು 24×7 ಸಹಾಯವಾಣಿ ಬೆಂಬಲವನ್ನು ಸಹ ಒದಗಿಸುತ್ತದೆ. ಫೋನ್ ಕರೆಗಳು, ಲೈವ್ ಚಾಟ್ ಗಳು, ವೆಬ್ ಎಕ್ಸ್ ಸೆಷನ್ ಗಳು ಮತ್ತು ಟ್ವಿಟರ್ / ಎಕ್ಸ್ ನಲ್ಲಿ ಬೆಂಬಲ ಲಭ್ಯವಿದೆ.

]]>
Mon, 15 Sep 2025 11:15:34 +0530 shivuagrico
ಗೃಹಲಕ್ಷ್ಮಿಯರಿಗೆ ಗುಡ್‌ನ್ಯೂಸ್‌ : ಬಾಕಿ 22 ಮತ್ತು 23 ನೇ ಕಂತಿನ ಒಟ್ಟು 4000 ಹಣ ಬಿಡುಗಡೆ ಈ ದಿನ ಖಾತೆಗೆ https://krushirushi.in/Gruhalakshmi-amount-credit-on-this-date https://krushirushi.in/Gruhalakshmi-amount-credit-on-this-date ಗೃಹಲಕ್ಷ್ಮಿ ಯೋಜನೆಯಡಿ 22 ಮತ್ತು 23ನೇ ಕಂತಿನ ಒಟ್ಟು ₹4,000 ಹಣವನ್ನು ಇದೇ ತಿಂಗಳು ಬರುವ ಸೆಪ್ಟೆಂಬರ್‌ 7 ಮತ್ತು 9ನೇ ತಾರೀಕಿಗೆ ಬಿಡುಗಡೆ ಸಾಧ್ಯತೆ ಇದೇ ಎನ್ನಲಾಗಿದೆ. 2 ಮತ್ತು 23ನನೇ ಕಂತಿನ ₹4,000 ಹಣವನ್ನು ದಸರಾ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಫಲಾನುಭವಿಗಳ ಖಾತೆಗೆ ಜಮೆಮಾಡಲಾಗುವುದು ಎನ್ನಲಾಗಿದೆ.

ಮಹಿಳೆಯರನ್ನು ಬೆಂಬಲಿಸಲು ಮತ್ತು ಅವರ ಜೀವನೋಪಾಯವನ್ನು ಸುಧಾರಿಸುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿದೆ.

ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯು ಅತ್ಯಂತ ಮಹತ್ವಕಾಂಕ್ಷಿ ಯೋಜನೆಯಾಗಿದೆ. ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000/-ಗಳನ್ನು ನೀಡುವ "ಗೃಹಲಕ್ಷ್ಮಿ ಯೋಜನೆ"ಯನ್ನು ದಿನಾಂಕ:06-06-2023ರ ಸರ್ಕಾರದ ಆದೇಶದಂತೆ ಜಾರಿಗೊಳಿಸಲಾಗುತ್ತಿದೆ.

ಗೃಹ ಲಕ್ಷ್ಮಿ ಯೋಜನೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಫಲಾನುಭವಿಗಳು ಆನ್‌ಲೈನ್ ಪೋರ್ಟಲ್‌ಗಳು ಅಥವಾ ಸೇವಾ ಕೇಂದ್ರಗಳ ಮೂಲಕ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಗೃಹ ಲಕ್ಷ್ಮಿ ಯೋಜನೆಯನ್ನು ಆನ್‌ಲೈನ್‌ನಲ್ಲಿ ಅನ್ವಯಿಸುವ ಹಂತಗಳು ಹೀಗಿವೆ.

ಹಂತ-1: ಅಧಿಕೃತ ಜಾಲತಾಣ ಸೇವಾ ಸಿಂಧು ಪೋರ್ಟಲ್‌ https://sevasindhuservices.karnataka.gov.in/ ಗೆ ಭೇಟಿ ನೀಡಿ.

ಹಂತ-2: ಸೇವಾ ಸಿಂಧು ಅಕೌಂಟ್ ಲಾಗ್‌ಇನ್ ಮಾಡಿ.

ಹಂತ-3: ಅಲ್ಲಿ Apply For Services ಅಂತ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ View All Available Services ಅಂತ ಕಾಣುತ್ತದೆ ಅದನ್ನು ಸೇಲೆಕ್ಟ್ ಮಾಡಿ.

ಹಂತ-4: ನಂತರ GruhaLakshmi Yojana Pre Approved ಎಂದಿರುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿ.

ಹಂತ-5: ಮತ್ತೊಂದು ಪುಟದಲ್ಲಿ Gruhalakshmi Application ಓಪನ್ ಆಗುತ್ತದೆ. ಅಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿರಿ.

ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ-Gruhalakshmi status

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Mon, 15 Sep 2025 09:24:50 +0530 shivuagrico
ರೈತರಿಗೆ ಗುಡ್ ನ್ಯೂಸ್: 'ಕೃಷಿ ಸಿಂಚಾಯಿ ಯೋಜನೆ'ಯಡಿ ಹನಿ ನೀರಾವರಿ ಸೌಲಭ್ಯ! https://krushirushi.in/Drip-irrigation-farmers-scheme https://krushirushi.in/Drip-irrigation-farmers-scheme 2025-26ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗಾಗಿ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು:

ಆಧಾರ್ ಕಾರ್ಡ್

ನೀರಾವರಿ ಪ್ರಮಾಣ ಪತ್ರ

ಪಹಣಿ ಪತ್ರ

ಪರಿಶಿಷ್ಟ ಜಾತಿ/ಪಂಗಡ ಪ್ರಮಾಣ ಪತ್ರ (ಅಗತ್ಯವಿದ್ದಲ್ಲಿ)

ರೂ.20/- ಛಾಪಾ ಕಾಗದ (ನೋಟರಿ ಸಹಿತ)

ಬ್ಯಾಂಕ್ ಪಾಸ್ ಬುಕ್

RTGS ಪತ್ರ

ಎಫ್‌ಐಡಿ (FID) ಕಡ್ಡಾಯ:

ಈಗಾಗಲೇ ಎಫ್‌ಐಡಿ ಹೊಂದಿದ್ದಲ್ಲಿ, ಎಲ್ಲ ಪಹಣಿಗಳನ್ನು ಜೋಡಿಸಿಕೊಳ್ಳಬೇಕು.

ಹೊಂದಿರದವರು ಹೊಸದಾಗಿ ಪಡೆದು ಜೋಡಿಸಿಕೊಳ್ಳಬೇಕು.

ಆಸಕ್ತ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆಯಬಹುದು.

]]>
Sun, 14 Sep 2025 08:48:19 +0530 shivuagrico
ರೈತರಿಗೆ ಸಿಹಿ ಸುದ್ದಿ: ಆಧಾರ್, ಪಹಣಿ ಸೇರಿದಂತೆ ಅಗತ್ಯ ದಾಖಲೆ ಸಲ್ಲಿಸಿದವರಿಗೆ ತುಂತುರು ನೀರಾವರಿ ಸೌಲಭ್ಯ ಲಭ್ಯ https://krushirushi.in/Drip-irrigation-Scheme https://krushirushi.in/Drip-irrigation-Scheme 2025-26ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಘಟಕಗಳಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ರೈತರು ಅರ್ಜಿ ನಮೂನೆಯೊಂದಿಗೆ ಆಧಾರ್ ಕಾರ್ಡ್, ನೀರಾವರಿ ಪ್ರಮಾಣ ಪತ್ರ, ಪಹಣಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ, ನೋಟರಿಯೊಂದಿಗೆ ರೂ.20/- ಗಳ ಛಾಪಾ ಕಾಗದ, ಬ್ಯಾಂಕ್ ಪಾಸ್ ಬುಕ್, ಆರ್.ಟಿ.ಜಿ.ಎಸ್.

ಪತ್ರಗಳನ್ನು ಸಲ್ಲಿಸಬೇಕು. ಎಫ್‌ಐಡಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ರೈತರು ಈಗಾಗಲೇ ಎಫ್‌ಐಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಪಹಣಿಗಳನ್ನು ಎಫ್‌ಐಡಿಗೆ ಜೋಡಣೆ ಮಾಡಿಕೊಳ್ಳಬೇಕು.

ಆಸಕ್ತ ರೈತರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

]]>
Sat, 13 Sep 2025 08:51:32 +0530 shivuagrico
ರಾಜ್ಯದ ಜನತೆಗೆ ಬಿಗ್ ಶಾಕ್ : ಈ ಬಿಪಿಎಲ್ ಪಡಿತರ ಚೀಟಿ ರದ್ದತಿಗೆ ಸಿದ್ದರಾಮಯ್ಯ ಸೂಚನೆ https://krushirushi.in/Bpl-cancellation https://krushirushi.in/Bpl-cancellation ಕರ್ನಾಟಕದ ಜನತೆಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಯಾರೆಲ್ಲ ಪಡಿತರ ಚೀಟಿ ಹೊಂದಲು ಅನರ್ಹರೋ ಅಂತವರ ಬಿಪಿಎಲ್ ಕಾರ್ಡ್ ಅನರ್ಹಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ ಸಭೆಯಲ್ಲಿ ಖಡಕ್‌ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಲವು ಮಹತ್ವ ಚರ್ಚೆ ನಡೆಸಲಾಗಿದೆ.

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ. ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು.

ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು. ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು. ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

]]>
Fri, 12 Sep 2025 15:44:00 +0530 shivuagrico
Uttara male&ನಾಳೆಯಿಂದ ಉತ್ತರ ಮಳೆ, ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ https://krushirushi.in/Uttara-male https://krushirushi.in/Uttara-male Uttara male-ನಾಳೆಯಿಂದ ಉತ್ತರ ಮಳೆ, ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ಸೆಪ್ಟೆಂಬರ್ 13ರಿಂದ 19ರ ತನಕ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗಿದೆ.
ಈಗಿನಂತೆ ಸೆಪ್ಟೆಂಬರ್ 14 ರಿಂದ 18ರ ತನಕ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ನಂತರ ದಿನದ ಹೆಚ್ಚಿನ ಅವಧಿ ಬಿಸಿಲು ಇರಬಹುದು ಕೊಡಗು ಜಿಲ್ಲೆಯಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ರಾಮನಗರ ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ, ಮುಂಜಾನೆ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 20ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮಧ್ಯ ಒಂದೆರಡು ದಿನಗಳಲ್ಲಿ ಕಡಿಮೆ ಇರಬಹುದು.
ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 13ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ರಾಜ್ಯದ ಉತ್ತರ ಒಳನಾಡು, ಮಹಾರಾಷ್ಟ್ರ ಮೂಲಕ ಸಾಗಿ ಸೆಪ್ಟೆಂಬರ್ 15ರಂದು ಮಹಾರಾಷ್ಟ್ರ ಕರಾವಳಿ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ.

ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ಸೆಪ್ಟೆಂಬರ್ 13ರಿಂದ 19ರ ತನಕ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗಿದೆ.
ಈಗಿನಂತೆ ಸೆಪ್ಟೆಂಬರ್ 14 ರಿಂದ 18ರ ತನಕ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ನಂತರ ದಿನದ ಹೆಚ್ಚಿನ ಅವಧಿ ಬಿಸಿಲು ಇರಬಹುದು ಕೊಡಗು ಜಿಲ್ಲೆಯಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ರಾಮನಗರ ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ, ಮುಂಜಾನೆ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 20ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮಧ್ಯ ಒಂದೆರಡು ದಿನಗಳಲ್ಲಿ ಕಡಿಮೆ ಇರಬಹುದು.
ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 13ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ರಾಜ್ಯದ ಉತ್ತರ ಒಳನಾಡು, ಮಹಾರಾಷ್ಟ್ರ ಮೂಲಕ ಸಾಗಿ ಸೆಪ್ಟೆಂಬರ್ 15ರಂದು ಮಹಾರಾಷ್ಟ್ರ ಕರಾವಳಿ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ.

Male nakshatragalu-2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು


2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-14-4-2025

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-28-4-2025

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2025

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-25-5-2025

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-6-7-2025

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-20-7-2025

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-31-8-2025

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2025

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-27-9-2025

ಉತ್ತಮ ಮಳೆ

14.ಚಿತ್ತ

ದಿನಾಂಕ-11-10-2025

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-24-10-2025

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2025

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs  ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in  website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.     

https://krushirushi.in/contact-us


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ

]]>
Fri, 12 Sep 2025 12:48:02 +0530 shivuagrico
ಸಚಿವ ಪ್ರಿಯಾಂಕ್ ಖರ್ಗೆ ಭರವಸೆ: ಬಾಕಿ ವಿಮೆ ಹಣ 10 ದಿನಗಳಲ್ಲಿ ರೈತರ ಖಾತೆಗೆ ಜಮೆ https://krushirushi.in/Pending-insurance-amount-will-be-credited-to-farmers-accounts-within-10-days. https://krushirushi.in/Pending-insurance-amount-will-be-credited-to-farmers-accounts-within-10-days. 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಬಾಕಿ ಪರಿಹಾರ ₹291.92 ಕೋಟಿ ಈಗಾಗಲೇ ಬಿಡುಗಡೆಯಾಗಿದ್ದು, 10 ದಿನಗಳಲ್ಲಿ ಜಿಲ್ಲೆಯ ರೈತರ ಖಾತೆಗೆ ಜಮೆಯಾಗಲಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

'2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಒಟ್ಟು ₹656.62 ಕೋಟಿ ಬೆಳೆ ವಿಮೆ ಪರಿಹಾರ ಬಿಡುಗಡೆಯಾಗಿತ್ತು. ಇಷ್ಟು ದೊಡ್ಡ ಮೊತ್ತ ಬಿಡುಗಡೆಯಾಗಿದ್ದು ಐತಿಹಾಸದಲ್ಲೇ ಮೊದಲ ಸಲ. ಅದರಲ್ಲಿ ಮೊದಲ ಕಂತಿನಲ್ಲಿ ₹364.70 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿತ್ತು. ಬಾಕಿ ಉಳಿದಿದ್ದ ₹291.92 ಕೋಟಿ ಪರಿಹಾರ ಮಂಜೂರಾತಿಗೆ ತಾಂತ್ರಿಕ ತೊಡಕು ಎದುರಾಗಿತ್ತು. ಈ ಸಂಬಂಧ ಆರ್ಥಿಕ ಇಲಾಖೆ ಕೇಳಿದ ಪ್ರಶ್ನೆಗಳಿಗೆ ಜಿಲ್ಲಾಡಳಿತ ಸಮರ್ಪಕ ಉತ್ತರ ನೀಡಿದೆ. ನಾವೂ ಈ ಬಗೆಗೆ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿದೆವು. ಇದೀಗ ಬಾಕಿ ಬೆಳೆವಿಮೆ ಪರಿಹಾರ ಬಿಡುಗಡೆಯಾಗಿದ್ದು, ಮುಂದಿನ‌ ವಾರ ಬೆಳೆವಿಮೆ ಪರಿಹಾರ ರೈತರ ಬ್ಯಾಂಕ್ ಖಾತೆಗೆ ಜಮಾವಣೆಯಾಗಲಿದೆ' ಎಂದರು.

'ಆಗಸ್ಟ್‌ನಲ್ಲಿ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಪ್ರಾಥಮಿಕ ವರದಿಯಲ್ಲಿ 1.05 ಲಕ್ಷ ಹೆಕ್ಟೇರ್‌ ಹಾನಿ ಅಂದಾಜಿಸಲಾಗಿದೆ. ಈ ಸಲವೂ 3 ಲಕ್ಷದಷ್ಟು ರೈತರು ಬೆಳೆವಿಮೆ ಪಡೆದಿದ್ದಾರೆ. ಜಿಲ್ಲಾಡಳಿತ ಹೋಬಳಿಮಟ್ಟದಲ್ಲಿ ಮುಂದಿನ 10 ದಿನಗಳಲ್ಲಿ ಜಂಟಿ ಸಮೀಕ್ಷೆ ನಡೆಸಿ ನಿಖರ ಹಾನಿಯನ್ನು ಲೆಕ್ಕಹಾಕಲಿದೆ. ಬಳಿಕ ಪರಿಹಾರ ಪೋರ್ಟಲ್‌ನಲ್ಲಿ ದಾಖಲಿಸಿ ಪರಿಹಾರ ಕೊಡಿಸಲು ಯತ್ನಿಸಲಾಗುವುದು' ಎಂದರು.

]]>
Fri, 12 Sep 2025 10:09:44 +0530 shivuagrico
PM Awas Yojana: ಪಿಎಂ ಆವಾಸ್ ಯೋಜನೆಯಡಿ ಒಟ್ಟು 47,848 ಮನೆಗಳ ಮಂಜೂರು: ಸಿಎಂ https://krushirushi.in/PM-Awas-Yojana-free-houses https://krushirushi.in/PM-Awas-Yojana-free-houses PM Awas Yojana: ಪಿಎಂ ಆವಾಸ್ ಯೋಜನೆಯಡಿ ಒಟ್ಟು 47,848 ಮನೆಗಳ ಮಂಜೂರು: ಸಿಎಂ

 ಪ್ರಧಾನಮಂತ್ರಿ  ಆವಾಸ್ ಯೋಜನೆ (ನಗರ)‌ (PM Awas Yojana) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಫಲಾನುಭವಿಗಳ ವಂತಿಕೆ ಒಟ್ಟು ರೂ. 134 ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಲು ಸೂಚನೆ ನೀಡಿದರು.

]]>
Thu, 11 Sep 2025 14:06:44 +0530 shivuagrico
ಬೆಳೆ ಪರಿಹಾರ ಹೆಚ್ಚಿಸಲು ಸರ್ಕಾರ ನಿರ್ಧಾರ, ಈಗ ಎಕರೆಗೆ ಎಷ್ಟಿದೆ ಪರಿಹಾರ? https://krushirushi.in/Bela-parihar-increase https://krushirushi.in/Bela-parihar-increase ರಾಜ್ಯದ ರೈತರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದ್ದು ಬೆಳೆ ನಷ್ಟ ಪರಿಹಾರವನ್ನು ಹೆಚ್ಚಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಹಾಗಾದರೆ ಪರಿಹಾರ ಎಷ್ಟು ಹೆಚ್ಚಾಗುತ್ತದೆ? ಈಗೆಷ್ಟು ಪರಿಹಾರವನ್ನು ನೀಡಲಾಗುತ್ತಿದೆ? ಇಲ್ಲಿದೆ ನೋಡಿ ಡಿಟೇಲ್ಸ್.

ಹೌದು, ರಾಜ್ಯದಲ್ಲಿ ಅಂದಾಜು 5.20 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಷ್ಟವನ್ನು ಅಂದಾಜು ಮಾಡಲಾಗಿದೆ. ಈ ಬೆನ್ನಲ್ಲೇ ಎಸ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ಸಧ್ಯ ನೀಡುವ ಪರಿಹಾರ ಏನೇನೂ ಸಾಲದು ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಸುಮಾರು 5 ವರ್ಷಗಳ ಬಳಿಕ ಬೆಳೆ ನಷ್ಟ ಪರಿಹಾರ ಪರಿಷ್ಕರಣೆಗೆ ಸರಕಾರ ಮುಂದಾಗಿದೆ.

ಈ ಕುರಿತಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರು ”ಮಳೆಯಿಂದ ರಾಜ್ಯದ ಬಹುಭಾಗಗಳಲ್ಲಿ ವ್ಯಾಪಕವಾಗಿ ಬೆಳೆ ಹಾನಿಯಾಗಿದ್ದು, ರೈತರಿಗೆ ಎಸ್‌ಡಿಆರ್‌ಎಫ್‌ ಮಾರ್ಗಸೂಚಿಗಿಂತ ಹೆಚ್ಚಿನ ಪರಿಹಾರ ನಿಗದಿ ಮಾಡುವ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು,” ಎಂದು ಹೇಳಿದ್ದಾರೆ.

ಸದ್ಯ ನೀಡುವ ಬೆಳೆ ನಷ್ಟ ಪರಿಹಾರ ಎಷ್ಟು?

ವಿಪತ್ತು ನಿರ್ವಹಣಾ ಮಾರ್ಗಸೂಚಿಯಂತೆ ಪ್ರಸ್ತುತ ಗರಿಷ್ಠ 2 ಹೆಕ್ಟೇರ್‌ ಪ್ರದೇಶದ ಮಿತಿಗೊಳಪಟ್ಟು ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಣೆ ಮಾಡಲಾಗುತ್ತಿದೆ.

ಮಳೆಯಾಶ್ರಿತ ಬೆಳೆ – 8,500 ರೂ.

ನೀರಾವರಿ ಪ್ರದೇಶದ ಬೆಳೆ – 17,000 ರೂ.

ದೀರ್ಘಾವಧಿ (ತೋಟಗಾರಿಕೆ) ಬೆಳೆ – 22,500 ರೂ.

ಮನೆ ಹಾನಿಗೆ ಪ್ರಸ್ತುತ ಎಷ್ಟು ಪರಿಹಾರ?

ಸಣ್ಣ ಪ್ರಮಾಣದ ಹಾನಿ – 6,500 ರೂ.

ಶೇ. 20 ರಿಂದ ಶೇ. 50ರಷ್ಟು ಹಾನಿ – 30 ಸಾವಿರ ರೂ.

ಶೇ.50 ರಿಂದ ಶೇ. 75 ರಷ್ಟು ಹಾನಿ – 50 ಸಾವಿರ ರೂ.

ಸಂಪೂರ್ಣ ಮನೆ ಹಾನಿ – 1 ಲಕ್ಷ 20 ಸಾವಿರ ರೂ.

ಅಂದಹಾಗೆ ಈ ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಮೊತ್ತ ಹೆಚ್ಚಳ ಮಾಡಲಾಗಿತ್ತು. ಇದರ ಬಳಿಕ ಸದ್ಯ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಬೆಳೆ ಪರಿಹಾರದ ಪರಿಷ್ಕರಣಿಗೆ ಮುಂದಾಗಿ ರೈತರಿಗೆ ಸಿಹಿ ಸುದ್ದಿ ನೀಡಿದೆ.

]]>
Thu, 11 Sep 2025 10:42:15 +0530 shivuagrico
Bele parihara&ರಾಜ್ಯದ 5.20 ಲಕ್ಷ ಬೆಳೆಹಾನಿಗೆ 1.52 ಕೋಟಿ ಪರಿಹಾರ ವಿತರಣೆ,ನಿಮ್ಮ ಬೆಳೆಪರಿಹಾರ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Bele-parihara-2258 https://krushirushi.in/Bele-parihara-2258 Bele parihara-ರಾಜ್ಯದ 5.20 ಲಕ್ಷ ಬೆಳೆಹಾನಿಗೆ 1.52 ಕೋಟಿ ಪರಿಹಾರ ವಿತರಣೆ,ನಿಮ್ಮ ಬೆಳೆಪರಿಹಾರ ಸ್ಟೇಟಸ್ ಹೀಗೆ ಚೆಕ್ ಮಾಡಿ

ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಮತ್ತು ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

 

ಈ ವೇಳೆ ತುಂಗಾಭದ್ರಾ ಅಣೆಕಟ್ಟಿನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಆಗಿದ್ದು, 8 ಕ್ರಸ್ಟ್‌ಗೇಟ್‌ ಅಳವಡಿಕೆಗೆ ಸಿದ್ಧವಿದೆ ಎಂದು ಸಭೆಗೆ ಅಧಿಕಾರಿಗಳು ವಿವರಿಸಿದರು.

 

ಕ್ರೆಸ್ಟ್ ಗೇಟ್‌ಗಳ ಬದಲಾವಣೆ, ನಿರ್ವಹಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ಕೇಂದ್ರ ಸರ್ಕಾರದ ಅದೀನದ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ. ಇದು ಮಂಡಳಿಯ ಜವಾಬ್ದಾರಿ. ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.

 

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, 753 ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ.23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು. ಈ ಅವಧಿಯಲ್ಲಿ ಚಾಮರಾಜನಗರದಲ್ಲಿ ಶೇ.24ರಷ್ಟು ಕಡಿಮೆ ಮಳೆಯಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಶೇ.20ಕ್ಕಿಂತ ಹೆಚ್ಚು ಮಳೆ ದಾಖಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.

 

 

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಈಗ ಸ್ವಲ್ಪ ಕಡಿಮೆಯಿದೆ. ಪ್ರಮುಖ ಜಲಾಶಯಗಳ ಗರಿಷ್ಟ ಸಾಮರ್ಥ್ಯ 895.62 ಟಿಎಂಸಿ ಇದ್ದು, ಪ್ರಸ್ತುತ 840.52 ಟಿಎಂಸಿ ಸಂಗ್ರಹವಿದೆ. ಕಳೆದ ವರ್ಷ ಈ ಅವಧಿಯಲ್ಲಿ 856.17 ಟಿಎಂಸಿ ಸಂಗ್ರಹ ಇತ್ತು. ತುಂಗಾ ಭದ್ರಾ ಅಣೆಕಟ್ಟಿನಲ್ಲಿ ಪ್ರಥಮ ಬೆಳೆಗೆ ಮಾತ್ರ ನೀರು ಲಭ್ಯವಿದ್ದು, ಎರಡನೇ ಬೆಳೆಗೆ ನೀರು ಹರಿಸಲು ಪ್ರಸ್ತುತ ಸನ್ನಿವೇಶದಲ್ಲಿ ಸಾಧ್ಯವಿಲ್ಲ. ನೀರು ಹರಿಸುವ ಪೂರ್ವದಲ್ಲೇ ಎಲ್ಲಾ ಸಣ್ಣಪುಟ್ಟ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.

 

 ಮಳೆ ಹಾನಿಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕು. ಮುಂಗಾರು ಹಂಗಾಮಿನಲ್ಲಿ ಶೇ.98 ಬಿತ್ತನೆ ಪೂರ್ಣಗೊಂಡಿದೆ. ಬಿತ್ತನೆ ಗುರಿ 82.50 ಲಕ್ಷ ಹೆಕ್ಟೇರ್ ಇದ್ದು, 80.76 ಲಕ್ಷ ಹೆಕ್ಟೇರ್ ವಾಸ್ತವಿಕ ಬಿತ್ತನೆಯಾಗಿದೆ. ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಹಾನಿ ಬಗ್ಗೆ ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದ್ದು, 480256 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 40407 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಒಟ್ಟು 520663 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಸಿಎಂ ಹೇಳಿದರು.

 

ಮಳೆಗೆ ಸಂಬಂಧಿಸಿದಂತೆ ಎಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 111ಮಂದಿ ಸಾವನ್ನಪ್ಪಿದ್ದು ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದ್ದು, ಒಟ್ಟು 5.55ಕೋಟಿ ಪರಿಹಾರ ನೀಡಲಾಗಿದೆ. 651ಮನೆಗಳು ಸಂಪೂರ್ಣ ಹಾನಿಯಾಗಿದ್ದು, 9087 ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಹಾನಿಯಾದ 649 ಮನೆಗಳಿಗೆ ಹಾಗೂ ಭಾಗಶಃ ಹಾನಿಯಾದ 8608 ಮನೆಗಳಿಗೆ ಪರಿಹಾರ ಪಾವತಿಸಲಾಗಿದೆ. ಮನೆ ಹಾನಿಯಾದವರಿಗೆ ಪರಿಹಾರ ಹಾಗೂ ವಿವಿಧ ವಸತಿ ಯೋಜನೆಗಳಡಿ ಮನೆಯನ್ನು ಸಹ ಒದಗಿಸಲು ಕ್ರಮ ಕೈಗೊಳ್ಳಬೇಕು. ಈ ಅವಧಿಯಲ್ಲಿ ಒಟ್ಟು 766 ಜಾನುವಾರುಗಳು ಸಾವಿಗೀಡಾಗಿದ್ದು, ಒಟ್ಟು 1.52 ಕೋಟಿ ಪರಿಹಾರ ವಿತರಿಸಲಾಗಿದೆ ಎಂದು ಸಿಎಂ ವಿವರಿಸಿದರು.

Input subsidy for croploss-ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ

ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Wed, 10 Sep 2025 10:27:22 +0530 shivuagrico
Bele parihara&ಬೆಳೆಹಾನಿಯಾದ ರೈತರ ಕರಡು ಪಟ್ಟಿ ಬಿಡುಗಡೆ,ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 7 ಕೊನೆಯ ದಿನಾಂಕ https://krushirushi.in/Bele-parihara-2257 https://krushirushi.in/Bele-parihara-2257 Bele parihara-ಬೆಳೆಹಾನಿಯಾದ ರೈತರ ಕರಡು ಪಟ್ಟಿ ಬಿಡುಗಡೆ,ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 7 ಕೊನೆಯ ದಿನಾಂಕ


2025-26 ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ ಹಾಗೂ ಅತೀವೃಷ್ಠಿಯಿಂದ 2025 ನೇ ಸಾಲಿನ ಆಗಸ್ಟ್ ತಿಂಗಳಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಉಂಟಾದ ಬೆಳೆಹಾನಿಗೆ ಸಂಬಂಧಿದಂತೆ, ಪರಿಹಾರವನ್ನು ಪಾವತಿಸುವ ಕುರಿತು ಜಂಟಿ ಸಮೀಕ್ಷೆಯನ್ನು ಜರುಗಿಸಲಾಗಿದೆ.

ಧಾರವಾಡ ತಾಲೂಕಿನಲ್ಲಿ 16,910.21 ಹೇಕ್ಟರ್ ಕೃಷಿ ಕ್ಷೇತ್ರ ಮತ್ತು 895 ಹೇಕ್ಟರ್ ತೋಟಗಾರಿಕೆ ಕ್ಷೇತ್ರ ಸೇರಿದಂತೆ ಧಾರವಾಡ ತಾಲೂಕಿನಲ್ಲಿ ಒಟ್ಟು 17,805.21 ಹೆಕ್ಟೆರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಹುಬ್ಬಳ್ಳಿ ತಾಲೂಕಿನಲ್ಲಿ 17,998.32 ಹೇಕ್ಟರ್ ಹೆಕ್ಟೆರ್ ಪ್ರದೇಶದಲ್ಲಿ ಕೃಷಿ ಬೆಳೆಗಳು ಹಾನಿಯಾಗಿವೆ. ಮತ್ತು ಹುಬ್ಬಳ್ಳಿ ನಗರ ತಾಲೂಕಿನಲ್ಲಿ 1,303.29 ಹೇಕ್ಟರ್ ಹೆಕ್ಟೆರ್ ಪ್ರದೇಶದಲ್ಲಿ ಕೃಷಿ ಬೆಳೆಗಳು ಹಾನಿಯಾಗಿವೆ.

ನವಲಗುಂದ ತಾಲೂಕಿನಲ್ಲಿ 23,993.98 ಹೇಕ್ಟರ್ ಕೃಷಿ ಕ್ಷೇತ್ರ ಮತ್ತು 2,323.37 ಹೇಕ್ಟರ್ ತೋಟಗಾರಿಕೆ ಕ್ಷೇತ್ರ ಸೇರಿದಂತೆ ಧಾರವಾಡ ತಾಲೂಕಿನಲ್ಲಿ ಒಟ್ಟು 26,317.35 ಹೆಕ್ಟೆರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಅಣ್ಣಿಗೇರಿ ತಾಲೂಕಿನಲ್ಲಿ 15,324.87 ಹೇಕ್ಟರ್ ಕೃಷಿ ಕ್ಷೇತ್ರ ಮತ್ತು 1063 ಹೇಕ್ಟರ್ ತೋಟಗಾರಿಕೆ ಕ್ಷೇತ್ರ ಸೇರಿದಂತೆ ಧಾರವಾಡ ತಾಲೂಕಿನಲ್ಲಿ ಒಟ್ಟು 16,387.87 ಹೆಕ್ಟೆರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಕುಂದಗೋಳ ತಾಲೂಕಿನಲ್ಲಿ 13,440.23 ಹೇಕ್ಟರ್ ಕೃಷಿ ಕ್ಷೇತ್ರ ಮತ್ತು 244.71 ಹೇಕ್ಟರ್ ತೋಟಗಾರಿಕೆ ಕ್ಷೇತ್ರ ಸೇರಿದಂತೆ ಧಾರವಾಡ ತಾಲೂಕಿನಲ್ಲಿ ಒಟ್ಟು 13,684.94 ಹೆಕ್ಟೆರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯಲ್ಲಿ 88,970.90 ಹೇಕ್ಟರ್ ಕೃಷಿ ಕ್ಷೇತ್ರದ ಬೆಳೆಗಳು ಮತ್ತು 4,526.08 ಹೇಕ್ಟರ್ ತೋಟಗಾರಿಕೆ ಪ್ರದೇಶದ ಬೆಳೆಗಳು ಸೇರಿದಂತೆ ಒಟ್ಟು 93,496.98 ಹೆಕ್ಟೆರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಜಂಟಿ ಸಮೀಕ್ಷೆಯ ಪರಿಶೀಲನಾ ವರದಿಯಂತೆ ಒಟ್ಟು 93,496.98 ಹೆಕ್ಟರ್ ಕ್ಷೇತ್ರಗಳಲ್ಲಿ ಬೆಳೆ ಹಾನಿಯಾದ ರೈತರ ಕರಡು ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಛೇರಿ, ಉಪವಿಭಾಧಿಕಾರಿಗಳ ಕಛೇರಿ, ಸಂಬಂಧಿಸಿದ ತಹಶೀಲ್ದಾರರ ಕಛೇರಿ, ಸಂಬಂಧಿಸಿದ ಗ್ರಾಮ ಪಂಚಾಯತ್ ಕಛೇರಿ, ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಅಂತರಜಾಲ https://dharwad.nic.in/…/document…/disaster-management/ ದಲ್ಲಿ ಈಗಾಗಲೇ ಪ್ರಕಟಿಸಲಾಗಿದೆ.

ಈ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ತಮ್ಮ ಲಿಖಿತ ಆಕ್ಷೇಪಣೆಗಳನ್ನು ಸಂಬಂಧಿಸಿದ ತಾಲ್ಲೂಕಿನ ತಹಶೀಲ್ದಾರ, ಕೃಷಿ ಅಥವಾ ತೋಟಗಾರಿಕಾ ಕಛೇರಿಗಳಲ್ಲಿ ಹಾಗೂ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಸೆಪ್ಟೆಂಬರ 07, 2025 ರ ಸಂಜೆ 5 ಗಂಟೆ ಒಳಗಾಗಿ ಸಲ್ಲಿಸಬೇಕು.

ಸೆಪ್ಟೆಂಬರ 07, 2025 ರಂದು ಸಂಜೆ 5 ಗಂಟೆವರೆಗೆ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸಿ, ಯಾದಿಯನ್ನು ಅಂತಿಮಗೊಳಿಸಲಾಗುವುದು. ನಿಗದಿ ಪಡಿಸಿದ ಅವಧಿಯ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

]]>
Thu, 04 Sep 2025 14:56:13 +0530 shivuagrico
ದೀಪಾವಳಿಗೆ ರೈತರಿಗೆ ಗಿಫ್ಟ್:ಟ್ರಾಕ್ಟರ್, ಬಯೋ ಪೆಸ್ಟಿಸೈಡ್ಸ್ ಮತ್ತು ಡ್ರಿಪ್ ಇರಿಗೇಶನ್ ಐಟಂಗಳಿಗೆ GST ಇಳಿಕೆ https://krushirushi.in/GST-Cut-on-Tractors-Spare-Parts-Bio-Pesticides-&-Drip-Irrigation-Items https://krushirushi.in/GST-Cut-on-Tractors-Spare-Parts-Bio-Pesticides-&-Drip-Irrigation-Items

ಸರಕು ಮತ್ತು ಸೇವಾ ತೆರಿಗೆ (GST) ಸಮಿತಿಯ 56ನೇ ಸಭೆ ಇಂದು ಆರಂಭವಾಗಿದ್ದು, ಉದ್ಯಮಿಗಳು ಮತ್ತು ವ್ಯಾಪಾರಸ್ಥರು ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ. ಹಬ್ಬದ ಸಂದರ್ಭದಲ್ಲಿ ಯಾವೆಲ್ಲ ವಸ್ತುಗಳ ಬೆಲೆ ಇಳಿಯಲಿದೆ ಹಾಗೂ ಹೆಚ್ಚಲಿದೆ ಎಂಬ ಕುತೂಹಲ ಗ್ರಾಹಕ ವಲಯದಲ್ಲೂ ಮನೆಮಾಡಿದೆ.

ಏನೆಲ್ಲಾ ನಿರೀಕ್ಷೆ ಇದೆ?

ಜಿಎಸ್‌ಟಿ ಸುಧಾರಣೆ ಮೂಲಕ ವರ್ತಕರ ವಲಯವು ದೀಪಾವಳಿ ಉಡುಗೊರೆ ನಿರೀಕ್ಷಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಹೇಳಿದ್ದರು. ಅದರ ಆಧಾರದಲ್ಲಿ ಹಲವು ವಿಭಾಗಗಳಲ್ಲಿ ತೆರಿಗೆ ಕಡಿತವಾಗುವ ನಿರೀಕ್ಷೆ ಇದೆ. ಸಮಿತಿಯಲ್ಲಿ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಇದ್ದಾರೆ. ಹಾಲಿ ಇರುವ ಶೇ 5, ಶೇ 12, ಶೇ 18 ಮತ್ತು ಶೇ 28 ತೆರಿಗೆಯ ನಾಲ್ಕು ಹಂತಗಳನ್ನು ಸರಳಗೊಳಿಸುವ ಸಾಧ್ಯತೆಗಳಿವೆ ಎಂದೆನ್ನಲಾಗಿದೆ.

ಯಾವ ವಸ್ತುಗಳು ಅಗ್ಗವಾಗಲಿವೆ?

ಈಗಾಗಲೇ ಸಲ್ಲಿಕೆಯಾಗಿರುವ ಪ್ರಸ್ತಾವದಂತೆ ಶೇ 28ರ ತೆರಿಗೆಯನ್ನು ಶೇ 18ಕ್ಕೆ ಇಳಿಸಲು ಸಚಿವರ ಸಮಿತಿ ಒಪ್ಪಿಗೆ ಸೂಚಿಸಿದೆ. ಹಾಗೆಯೇ ಶೇ 18ರ ತೆರಿಗೆ ಸ್ಲಾಬ್‌ ಶೇ 12ಕ್ಕೆ ಇಳಿಯಲಿವೆ. ಶೇ 12ರದ್ದು ಶೇ 5ಕ್ಕೆ ಕ್ರಮವಾಗಿ ಇಳಿಕೆಯಾಗುವ ಸಾಧ್ಯತೆಗಳಿವೆ.

ಸರಕು ಮತ್ತು ಸೇವಾ ತೆರಿಗೆಯನ್ನು ವಿಶಾಲ ಅರ್ಥದಲ್ಲಿ 'ಮೆರಿಟ್' ಅಥವಾ 'ಸ್ಟಾಂಡರ್ಡ್‌' ಎಂದು ವರ್ಗೀಕರಿಸಲಾಗಿದೆ. ತಂಬಾಕು ಮತ್ತು ವಿಲಾಸಿ ವಾಹನಗಳಿಗೆ ಸದ್ಯ ಇರುವ ಶೇ 40ರ 'ಸಿನ್‌ ಟ್ಯಾಕ್ಸ್‌' ಮುಂದುವರಿಯಲಿದೆ.

1200 ಸಿ.ಸಿ.ಗಿಂತ ಕಡಿಮೆ ಸಾಮರ್ಥ್ಯದ ಎಂಜಿನ್‌ ಹೊಂದಿರುವ ಸಣ್ಣ ಕಾರುಗಳು, 350 ಸಿಸಿ ಒಳಗಿನ ಮೋಟಾರ್‌ಸೈಕಲ್‌ಗಳು ಮತ್ತು ಬಿಡಿಭಾಗಗಳ ಮೇಲಿನ ತೆರಿಗೆ ಶೇ 28ರಿಂದ ಶೇ 18ಕ್ಕೆ ಇಳಿಕೆ

ಹೋಟೆಲ್ ಮತ್ತು ಮನರಂಜನಾ ಕ್ಷೇತ್ರದಲ್ಲಿ ಈವರೆಗೂ ಇದ್ದ ಶೇ 12ರಷ್ಟು ತೆರಿಗೆಯು ಶೇ 5ಕ್ಕೆ ಇಳಿಕೆ; ಕ್ಯಾನ್ಸರ್ ಔಷಧ ಮೇಲಿನ ಜಿಎಸ್‌ಟಿ ರದ್ದು; ಔಷಧ ಮತ್ತು ಇತರ ವೈದ್ಯಕೀಯ ಉಪಕರಣಗಳ ಮೇಲಿನ ತೆರಿಗೆ ಶೇ 12ರಿಂದ ಶೇ 5; ವೈಯಕ್ತಿಕ ಆರೋಗ್ಯ ಮತ್ತು ಜೀವ ವಿಮೆಗೆ ತೆರಿಗೆ ವಿನಾಯ್ತಿ

ದಿನನಿತ್ಯ ಬಳಸುವ ವಸ್ತುಗಳಾದ ಪನ್ನೀರ್, ಪಿಟ್ಜಾ ಬ್ರೆಡ್‌, ಖಾಕ್ರ, ಹಣ್ಣಿನ ರಸ, ಎಳನೀರು, ಮಜ್ಜಿಗೆ, ಚೀಸ್, ಪಾಸ್ತಾ ಮತ್ತು ಐಸ್‌ ಕ್ರೀಂ ಅಗ್ಗವಾಗಲಿದೆ. ಇವುಗಳ ಮೇಲಿನ ತೆರಿಗೆ ಶೇ 12ರಿಂದ ಶೇ 5ಕ್ಕೆ ಇಳಿಸುವ ಸಾಧ್ಯತೆಗಳಿವೆ.

ಕೃಷಿ ಕ್ಷೇತ್ರದಲ್ಲಿ ರಸಗೊಬ್ಬರಗಳ ಬೆಲೆ ಇಳಿಕೆಯಾಗುವ ಸಾಧ್ಯತೆಗಳಿವೆ. ಈ ಕ್ಷೇತ್ರಕ್ಕೆ ಅಗತ್ಯವಿರುವ ಸಲ್‌ಫ್ಯೂರಿಕ್‌ ಆಯಸಿಡ್, ನೈಟ್ರಿಕ್ ಆಯಸಿಡ್ ಮತ್ತು ಅಮೋನಿಯಾ ಮೇಲಿನ ತೆರಿಗೆ ಶೇ 18ರಿಂದ ಶೇ 5ಕ್ಕೆ ಇಳಿಕೆ

ಜವಳಿ ಕ್ಷೇತ್ರದಲ್ಲಿ ಸಿಂಥೆಟಿಕ್ ಯಾರ್ನ್, ಕೈಮಗ್ಗದ ನಾರಿನ ನೂಲು, ಕರಕುಶಲ ವಸ್ತುಗಳ ಮೇಲಿನ ತೆರಿಗೆ ಶೇ 12ರಿಂದ 5ಕ್ಕೆ ಇಳಿಕೆ

ಸೌರಶಕ್ತಿಯ ಕುಕ್ಕರ್‌ ಮೇಲಿನ ತೆರಿಗೆ ಶೇ 12ರಿಂದ ಶೇ 5ಕ್ಕೆ ಇಳಿಕೆಯಾಗುವ ಸಾಧ್ಯತೆಗಳಿವೆ. ಸ್ಟೇಷನರಿ ವಿಭಾಗದಲ್ಲಿ ಪೇಪರ್‌ ಮೇಲಿನ ಬರಹ ಅಳಿಸುವ ಎರೇಸರ್‌ಗೆ ಈ ಮೊದಲು ಶೇ 12ರಷ್ಟು ತೆರಿಗೆ ಇತ್ತು. ಅದನ್ನು ಕೈಬಿಡುವ ಸಾಧ್ಯತೆಗಳಿವೆ. ಭೂಪಟ, ಚಾರ್ಟ್‌ಗಳು, ನೋಟ್‌ಪುಸ್ತಕ, ಅಟ್ಲಾಸ್‌ ಮೇಲಿನ ಜಿಎಸ್‌ಟಿ ಶೇ 12ರಿಂದ 5ಕ್ಕೆ ಇಳಿಯಲಿದೆ. ಛತ್ರಿ ಮೇಲಿನ ತೆರಿಗೆ ಶೇ 5ಕ್ಕೆ ಇಳಿಕೆಯಾಗಲಿದೆ.

ಹಲ್ಲುಜ್ಜುವ ಪುಡಿ ಅಗ್ಗವಾಗುವ ನಿರೀಕ್ಷೆಗಳಿವೆ. ಇದರ ಮೇಲಿನ ಜಿಎಸ್‌ಟಿ ಶೇ 5ಕ್ಕೆ ಇಳಿಕೆಯಾಗುವ ಸಾಧ್ಯತಗಳಿವೆ. ಈ ಮೊದಲು ಶೇ 12ರಷ್ಟಿತ್ತು. ಜತೆಗೆ ಟೂತ್‌ಪೇಸ್ಟ್‌ ಮೇಲಿನ ತೆರಿಗೆಯೂ ಶೇ 18ರಿಂದ ಶೇ 12ಕ್ಕೆ; ಶಾಂಪೂ, ಎಣ್ಣೆ ಮತ್ತು ಸೋಪುಗಳ ಮೇಲಿನ ತೆರಿಗೆ ಶೇ 18ರಿಂದ ಶೇ 5ಕ್ಕೆ ಇಳಕೆಯಾಗುವ ಸಾಧ್ಯತೆಗಳಿವೆ.

₹7,500 ಒಳಗಿನ ಹೋಟೆಲ್ ಕೊಠಡಿಗಳ ಬಾಡಿಗೆ ಮೇಲಿನ ತೆರಿಗೆಯು ಶೇ 12ರಿಂದ ಶೇ 5ಕ್ಕೆ ಇಳಿಸಲು ಸಮಿತಿ ಪ್ರಸ್ತಾವ ಸಲ್ಲಿಸಿದೆ.

ಯಾವುದೆಲ್ಲಾ ದುಬಾರಿಯಾಗಲಿದೆ..?

ವಿಲಾಸಿ ಮತ್ತು ಹಾನಿಕಾರಕ ವಸ್ತುಗಳಲ್ಲಿ ತಂಬಾಕು, ಪಾನ್ ಮಸಾಲಾ ಮತ್ತು ವಿಲಾಸಿ ವಾಹನಗಳ ಮೇಲಿನ ತೆರಿಗೆ ಶೇ 40ರಲ್ಲೇ ಮುಂದುವರಿಯುವ ಸಾಧ್ಯತೆಗಳಿವೆ.

ಬ್ಯಾಟರಿ ಚಾಲಿತ (EV) ₹20 ಲಕ್ಷ ಮೇಲಿನ ವಾಹನಗಳ ಬೆಲೆ ಈಗಿರುವ ಶೇ 5ರ ಜಿಎಸ್‌ಟಿಯಿಂದ ಶೇ 18ಕ್ಕೆ ಏರಿಕೆಯಾಗಲಿದೆ. ₹40 ಲಕ್ಷ ಮೇಲಿನ ಇವಿ ವಾಹನಗಳಿಗೆ ಶೇ 40ರಷ್ಟು ತೆರಿಗೆಯನ್ನು ಪಾವತಿಸಬೇಕಾಗುತ್ತದೆ

ಕಲ್ಲಿದ್ದಲು ಮೇಲಿನ ಜಿಎಸ್‌ಟಿ ಶೇ 5ರಿಂದ ಶೇ 18ಕ್ಕೆ ಏರಿಕೆಯಾಗಲಿದೆ. ಇದು ವಿದ್ಯುತ್ ಶುಲ್ಕದ ಮೇಲೆ ಪರಿಣಾಮ ಬೀರಲಿದೆ.

₹2,500ಕ್ಕಿಂತ ಮೇಲಿನ ಪ್ರತಿ ಸಿದ್ಧ ಉಡುಪಿಗೆ ಈಗಿರುವ ಶೇ 12ರ ಜಿಎಸ್‌ಟಿಯನ್ನು ಶೇ 18ಕ್ಕೆ ಏರಿಸುವ ಪ್ರಸ್ತಾವವಿದೆ.

ಮಧ್ಯಮ ವರ್ಗದ ಗ್ರಾಹಕರ ಹಿತ ಮತ್ತು ಖಾಸಗಿ ಹೂಡಿಕೆಯನ್ನು ಗಮನದಲ್ಲಿಟ್ಟುಕೊಂಡು ಜಿಎಸ್‌ಟಿ ಸಮಿತಿ ಶಿಫಾರಸುಗಳನ್ನು ಮಾಡಿದ್ದು, ಇದರಿಂದ ಆದಾಯದಲ್ಲಿ ₹50 ಸಾವಿರ ಕೋಟಿ ನಷ್ಟ ಉಂಟಾಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ.

]]>
Thu, 04 Sep 2025 10:52:13 +0530 shivuagrico
ಕಾರ್ಮಿಕರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಉಪಹಾರಕ್ಕೆ ಪ್ರತಿ ತಿಂಗಳು 1500 ರೂ. ನೇರ ವರ್ಗಾವಣೆ https://krushirushi.in/Good-News-for-Workers-Under-this-scheme-1500-will-be-directly-transferred-every-month-for-breakfast. https://krushirushi.in/Good-News-for-Workers-Under-this-scheme-1500-will-be-directly-transferred-every-month-for-breakfast. ಬೆಂಗಳೂರು ಜಲಮಂಡಳಿ ನೈರ್ಮಲ್ಯೀಕರಣ ಕಾರ್ಮಿಕರಿಗೆ ಅನ್ನಪೂರ್ಣ ಯೋಜನೆಯಡಿ ಸ್ಮಾರ್ಟ್‌ಕಾರ್ಡ್‌ ವಿತರಣೆ ಮಾಡಲಾಗಿದೆ. 

ಈ ಮೂಲಕ 700+ ನೈರ್ಮಲ್ಯೀಕರಣ ಕಾರ್ಮಿಕರಿಗೆ ಉಪಹಾರಕ್ಕಾಗಿ ಪ್ರತಿದಿನ ₹50 ರಂತೆ ಮಾಸಿಕ ₹1,500ನಷ್ಟು ಹಣವು ಸ್ಮಾರ್ಟ್‌ಕಾರ್ಡ್‌ ಮೂಲಕ ನೇರ ವರ್ಗಾವಣೆಯಾಗಲಿದೆ.

ಅನ್ನಪೂರ್ಣ ಯೋಜನೆ

ಬೆಂಗಳೂರು ಜಲಮಂಡಳಿ ನೈರ್ಮಲೀಕರಣ ಕಾರ್ಮಿಕರಿಗೆ ಅನ್ನಪೂರ್ಣ ಯೋಜನೆಯಡಿ ಸ್ಮಾರ್ಟ್‌ ಕಾರ್ಡ್‌ ವಿತರಣೆ

700+ ನೈರ್ಮಲೀಕರಣ ಕಾರ್ಮಿಕರಿಗೆ ಉಪಹಾರಕ್ಕಾಗಿ ಪ್ರತಿದಿನ ₹50 ರಂತೆ ಮಾಸಿಕ ₹1,500 ಅನ್ನು ಸ್ಮಾರ್ಟ್‌ ಕಾರ್ಡ್ ಮೂಲಕ ನೇರ ನಗದು ವರ್ಗಾವಣೆ

ಎಕ್ಸಿಸ್ ಬ್ಯಾಂಕ್‌ನ ಸಹಯೋಗದೊಂದಿಗೆ ಸ್ಮಾರ್ಟ್ ಕಾರ್ಡ್‌ಗಳ ವಿತರಣೆ

ಈ ಯೋಜನೆಗೆ ಅಂದಾಜು ಮಾಸಿಕ ₹10.50 ಲಕ್ಷ ಮತ್ತು ವಾರ್ಷಿಕ ₹1.26 ಕೋಟಿ ವೆಚ್ಚ

ಇದು ದೇಶದಲ್ಲಿಯೇ ಇಂತಹ ತಂತ್ರಜ್ಞಾನ ಆಧಾರಿತ ನೇರ ಹಣ ವರ್ಗಾವಣೆ ಮಾಡುವ ಮೊದಲ ಯೋಜನೆ.

]]>
Wed, 03 Sep 2025 16:06:07 +0530 shivuagrico
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ವೇತನ ಪರಿಷ್ಕರಣೆಯ ದಿನಾಂಕ ಫಿಕ್ಸ್, ಎಷ್ಟು ಹೆಚ್ಚಳ ಸಿಗಲಿದೆ? https://krushirushi.in/Good-news-for-government-employees:-Salary-revision-date-fixed,-how-much-hike-will-you-get https://krushirushi.in/Good-news-for-government-employees:-Salary-revision-date-fixed,-how-much-hike-will-you-get ಕೇಂದ್ರ ಸರ್ಕಾರಿ ನೌಕರರು ಡಿಎ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ಸದ್ಯದಲ್ಲೇ ಸಿಹಿಸುದ್ದಿಯನ್ನು ಕೊಡುವ ಸಾಧ್ಯತೆಯಿದೆ. ಕಳೆದ ಕೆಲವು ತಿಂಗಳುಗಳಿಂದ, ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು 8 ನೇ ವೇತನ ಆಯೋಗದ ಅನುಷ್ಠಾನದ ಬಗ್ಗೆ ಗೊಂದಲದಲ್ಲಿದ್ದಾರೆ.

ಇದೀಗ ಈ ಗೊಂದಲದ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿದ್ದು, ಸರ್ಕಾರಿ ನೌಕರರಿಗೆ ಖುಷಿಸುದ್ದಿ ಸಿಕ್ಕಂತಾಗಿದೆ.

ಎಂಟನೇ ವೇತನ ಆಯೋಗ ಯಾವತ್ತಿನಿಂದ ಜಾರಿಗೆ ಬರಲಿದೆ ಎನ್ನುವ ಕುತೂಹಲಕ್ಕೆ ಸದ್ಯದಲ್ಲೇ ತೆರೆಬೀಳುವ ಸಾಧ್ಯತೆಯಿದೆ. ಮೂಲಗಳ, ಪ್ರಕಾರ ಮುಂದಿನ ವರ್ಷದ ಮೊದಲ ದಿನದಿಂದಲೇ ಅನ್ವಯವಾಗುವಂತೆ ಜಾರಿಗೆ ಬರಬಹುದು ಎಂದು ಹೇಳಲಾಗುತ್ತಿದೆ. ಬಹುನಿರೀಕ್ಷಿತ, ಎಂಟನೇ ಆಯೋಗದ ಶಿಫಾರಸನ್ನು, ಮುಂದಿನ ವರ್ಷದ ಮೊದಲ ದಿನದಿಂದಲೇ ಜಾರಿಗೆ ತರುವ ಸಾಧ್ಯತೆಯಿದೆ ಎಂದು ವದರಿಯಾಗಿದೆ. ಈಗಾಗಲೇ ಎಂಟನೇ ವೇತನ ಆಯೋಗದ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಚರ್ಚೆ ಆರಂಭವಾಗಿದ್ದು, ವೇತನ ಮತ್ತು ಪಿಂಚಣಿ ಪರಿಷ್ಕರಣೆ ಜನವರಿ 1, 2026ರಿಂದಲೇ ಜಾರಿಗೆ ಬರುವಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನೌಕರರ ಸಂಘಟನೆಗಳು, ಕೇಂದ್ರ ಹಣಕಾಸು ಇಲಾಖೆಯನ್ನು ಒತ್ತಾಯಿಸಿದೆ.

ಮೂಲಗಳ ಪ್ರಕಾರ, 8ನೇ ವೇತನ ಆಯೋಗವು ಜನವರಿ 2026 ರಿಂದ ಜಾರಿಗೆ ಬರುವ ಸಾಧ್ಯತೆ ಇದ್ದು, ಸಮಿತಿ ರಚನೆಯಾದ ನಂತರ, ವೇತನ ಹೆಚ್ಚಳ, ಫಿಟ್‌ಮೆಂಟ್ ಅಂಶ, ತುಟ್ಟಿ ಭತ್ಯೆ ಲಿಂಕ್ ಕುರಿತು ಕೆಲಸವು ತ್ವರಿತವಾಗಿ ಪ್ರಾರಂಭವಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ವೇತನ ಆಯೋಗವು ನೀಡುವ ಶಿಫಾರಸನ್ನು ಜಾರಿಗೆ ತರಲು ಹತ್ತು ವರ್ಷಕ್ಕಿಂತ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳಬಾರದು ಎಂದು ನೌಕರರ ಸಂಘಟನೆಯ ಶಿವಗೋಪಾಲ್ ಮಿಶ್ರಾ ಅಭಿಪ್ರಾಯ ಪಟ್ಟಿದ್ದಾರೆ. ಏಳನೇ ವೇತನ ಆಯೋಗ ಜನವರಿ 1, 2016ಕ್ಕೆ ಜಾರಿಗೆ ಬಂದಿತ್ತು. ಹಾಗಾಗಿ, ಎಂಟನೇ ಆಯೋಗ ಶಿಫಾರಸು, ಜನವರಿ 2026ಕ್ಕೆ ಜಾರಿಗೆ ಬರುತ್ತದೆ ಎನ್ನುವುದು ಕೇಂದ್ರ ಸರ್ಕಾರೀ ನೌಕರರ ನಿರೀಕ್ಷೆಯಾಗಿದೆ.

ಇನ್ನೂ ಕೇಂದ್ರ ನೌಕರರಿಗೆ ದೀಪಾವಳಿ ಹಬ್ಬದ ಉಡುಗೊರೆ ನೀಡಲು ಮೋದಿ ಸರ್ಕಾರ ಸಿದ್ಧತೆ ನಡೆಸುತ್ತಿದೆ. 8 ನೇ ವೇತನ ಆಯೋಗಕ್ಕಾಗಿ ಸಮಿತಿಯನ್ನು ಅಕ್ಟೋಬರ್ ಅಂತ್ಯ ಅಥವಾ ನವೆಂಬರ್ 2025 ರ ಆರಂಭದಲ್ಲಿ ರಚಿಸಬಹುದು ಎಂಬ ಮೂಲಗಳು ತಿಳಿಸಿವೆ. ಇದು ಪ್ರಕ್ರಿಯೆಯ ಅಧಿಕೃತ ಆರಂಭವಾಗಿದ್ದು, ಈ ಆರಂಭವು ದೇಶದ 1 ಕೋಟಿಗೂ ಹೆಚ್ಚು ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಸಾವಿರಾರು ಮತ್ತು ಲಕ್ಷ ಆದಾಯ ಹೆಚ್ಚಳವನ್ನು ತರುತ್ತದೆ ಎಂದು ಹೇಳಲಾಗಿದೆ.

ಎಂಟನೇ ವೇತನ ಆಯೋಗವು ಜನವರಿ 2026ರಲ್ಲಿ ಜಾರಿಗೆ ಬರಬಹುದು ಎಂಬ ನಿರೀಕ್ಷಿಯಲ್ಲಿದ್ದು, ಹಣದುಬ್ಬರವನ್ನು ಶೇ. 6 - 7ರಷ್ಟು ನಿಗದಿ ಪಡಿಸುವ ಸಾಧ್ಯತೆಯಿದೆ. ಫಿಟ್‌ಮೆಂಟ್ ಅಂಶ, ತುಟ್ಟಿ ಭತ್ಯೆ ಲಿಂಕ್, ಹೊಸ ವೇತನ ಮ್ಯಾಟ್ರಿಕ್ಸ್ ಮತ್ತು ಪಿಂಚಣಿಯ ಸಂಪೂರ್ಣ ಲೆಕ್ಕಾಚಾರ ಮುಂದಿನ ಹಂತಕ್ಕೆ ಸಾಗುವ ಮೊದಲು ಈ ಕಾಲಮಿತಿಯನ್ನು ಒಂದು ಅಡಿಪಾಯದ ಹೆಜ್ಜೆಯಾಗಿ ನೋಡಲಾಗುತ್ತದೆ. ಇನ್ನೂ 8 ನೇ ವೇತನ ಆಯೋಗದ ಸಮಿತಿ ರಚನೆಯಾದ ನಂತರ, ಸಚಿವಾಲಯಗಳೊಂದಿಗೆ ಸಭೆ ಮತ್ತು ಕಾರ್ಮಿಕ ಸಂಘಗಳೊಂದಿಗೆ ಮಾತುಕತೆ ನಡೆಯುತ್ತವೆ. ನಂತರ, ಸಮಿತಿಯ ವರದಿಯನ್ನು ಸಲ್ಲಿಸಲಾಗುತ್ತದೆ.

]]>
Tue, 02 Sep 2025 11:37:30 +0530 shivuagrico
IBPS RRB ನೇಮಕಾತಿ 2025: ಒಟ್ಟು 13,217 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ https://krushirushi.in/IBPS-RRB-Recruitment-2025:-Online-Applications-Invited-for-a-Total-of-13,217 https://krushirushi.in/IBPS-RRB-Recruitment-2025:-Online-Applications-Invited-for-a-Total-of-13,217 ಬ್ಯಾಂಕಿಂಗ್ ವಲಯದಲ್ಲಿ ಕೆಲಸದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಶುಭ ಸುದ್ದಿ ಸಿಕ್ಕಿದೆ. ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) RRB PO ಮತ್ತು ಕ್ಲರ್ಕ್ ನೇಮಕಾತಿ 2025 (ಪ್ರಾದೇಶಿಕ ಗ್ರಾಮೀಣ ಬ್ಯಾಂಕ್) ಗಾಗಿ ಅಧಿಕೃತ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ.

ಇದರೊಂದಿಗೆ, ಸೆಪ್ಟೆಂಬರ್ 1 ರಿಂದ ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು ibps.in ಗೆ ಭೇಟಿ ನೀಡುವ ಮೂಲಕ ಅಥವಾ ಕೆಳಗೆ ನೀಡಲಾದ ನೇರ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ಸೆಪ್ಟೆಂಬರ್ 2025. ಒಟ್ಟು 13217 ಹುದ್ದೆಗಳಿಗೆ ಖಾಲಿ ಹುದ್ದೆ ಇದೆ. ಹುದ್ದೆಯ ಸಂಪೂರ್ಣ ವಿವರಗಳು, ಅರ್ಹತೆಯನ್ನ ಕೆಳಗೆ ನೋಡಿ.

ಪೋಸ್ಟ್‌ವೈಸ್ ಹುದ್ದೆಗಳು.!

ಒಟ್ಟು ಹುದ್ದೆಗಳು : 13217

ಕಚೇರಿ ಸಹಾಯಕ (ಗುಮಾಸ್ತ) : 7972 ರೀಬೂಟ್

ಅಧಿಕಾರಿ ಸ್ಕೇಲ್ I (PO) : 3907

ಅಧಿಕಾರಿ ಸ್ಕೇಲ್-II (ಕೃಷಿ ಅಧಿಕಾರಿ) : 50

ಅಧಿಕಾರಿ ಸ್ಕೇಲ್-II (ಕಾನೂನು ಅಧಿಕಾರಿ) : 48

ಅಧಿಕಾರಿ ಸ್ಕೇಲ್-II (ಚಾರ್ಟರ್ಡ್ ಅಕೌಂಟೆಂಟ್) : 69

ಅಧಿಕಾರಿ ಸ್ಕೇಲ್-II (ಐಟಿ ಅಧಿಕಾರಿ) : 87

ಅಧಿಕಾರಿ ಸ್ಕೇಲ್-II (ಸಾಮಾನ್ಯ ಬ್ಯಾಂಕಿಂಗ್ ಅಧಿಕಾರಿ) : 854

ಅಧಿಕಾರಿ ಸ್ಕೇಲ್-II (ಮಾರ್ಕೆಟಿಂಗ್ ಅಧಿಕಾರಿ) : 15

ಅಧಿಕಾರಿ ಸ್ಕೇಲ್-II (ಖಜಾನೆ ವ್ಯವಸ್ಥಾಪಕ) : 16

ಅಧಿಕಾರಿ ಸ್ಕೇಲ್-III (ಹಿರಿಯ ವ್ಯವಸ್ಥಾಪಕ) : 199 (ಪುಟ 199)

ಶೈಕ್ಷಣಿಕ ಅರ್ಹತೆ.!

ಶೈಕ್ಷಣಿಕ ಅರ್ಹತೆಯು ವಿವಿಧ ಕ್ಷೇತ್ರಗಳಲ್ಲಿ ಬದಲಾಗುತ್ತದೆ.

1. ಕಚೇರಿ ಸಹಾಯಕ (ಗುಮಾಸ್ತ): ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ಥಳೀಯ ಭಾಷೆಯ ಜ್ಞಾನ, ಕಂಪ್ಯೂಟರ್‌ನ ಮೂಲಭೂತ ಜ್ಞಾನ.

2. ಆಫೀಸರ್ ಸ್ಕೇಲ್ I (ಪಿಒ): ಕೃಷಿ, ಐಟಿ, ಮ್ಯಾನೇಜ್ಮೆಂಟ್, ಕಾನೂನು, ಅರ್ಥಶಾಸ್ತ್ರ ಅಥವಾ ಅಕೌಂಟೆನ್ಸಿ ವಿಷಯದಲ್ಲಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಸ್ಥಳೀಯ ಭಾಷೆಯ ಜ್ಞಾನ ಮತ್ತು ಕಂಪ್ಯೂಟರ್ ತಿಳುವಳಿಕೆ ಅತ್ಯಗತ್ಯ.

3. ಆಫೀಸರ್ ಸ್ಕೇಲ್ II (ಜನರಲ್ ಬ್ಯಾಂಕಿಂಗ್ ಆಫೀಸರ್) : ಬ್ಯಾಂಕಿಂಗ್, ಹಣಕಾಸು, ಕೃಷಿ, ಐಟಿ, ಕಾನೂನು, ನಿರ್ವಹಣೆ ಮುಂತಾದ ವಿಷಯಗಳಲ್ಲಿ ಪದವಿಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಯಲ್ಲಿ ಅಧಿಕಾರಿಯಾಗಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.

4. ಅಧಿಕಾರಿ ಸ್ಕೇಲ್ II (ವಿಶೇಷ ಅಧಿಕಾರಿ) : ಐಟಿ ಅಧಿಕಾರಿ - ಕಂಪ್ಯೂಟರ್, ಐಟಿ, ಎಲೆಕ್ಟ್ರಾನಿಕ್ಸ್‌ನಲ್ಲಿ ಪದವಿ ಮತ್ತು 1 ವರ್ಷದ ಅನುಭವ.

ಚಾರ್ಟರ್ಡ್ ಅಕೌಂಟೆಂಟ್ - ICAI ನಿಂದ CA ಮತ್ತು ಒಂದು ವರ್ಷದ ಅನುಭವ.

ಕಾನೂನು ಅಧಿಕಾರಿ- ಕಾನೂನು ಪದವಿ (50% ಅಂಕಗಳು) ಜೊತೆಗೆ ಬ್ಯಾಂಕ್, ಹಣಕಾಸು ಸಂಸ್ಥೆಯಲ್ಲಿ ವಕಾಲತ್ತು ಅಥವಾ 2 ವರ್ಷಗಳ ಅನುಭವ.

ಖಜಾನೆ ವ್ಯವಸ್ಥಾಪಕ- 1 ವರ್ಷದ ಅನುಭವದೊಂದಿಗೆ MBA (ಹಣಕಾಸು) ಅಥವಾ CA.

ಮಾರ್ಕೆಟಿಂಗ್ ಅಧಿಕಾರಿ- ಎಂಬಿಎ (ಮಾರ್ಕೆಟಿಂಗ್) ಮತ್ತು 1 ವರ್ಷದ ಅನುಭವ.

ಕೃಷಿ ಅಧಿಕಾರಿ : ಕೃಷಿ, ಹೈನುಗಾರಿಕೆ, ಪಶುಸಂಗೋಪನೆ, ಅರಣ್ಯ ಇತ್ಯಾದಿಗಳಲ್ಲಿ ಪದವಿ (50% ಅಂಕಗಳು) ಜೊತೆಗೆ 2 ವರ್ಷಗಳ ಅನುಭವ.

5. ಆಫೀಸರ್ ಸ್ಕೇಲ್ III (ಸೀನಿಯರ್ ಮ್ಯಾನೇಜರ್) : ಪದವಿ (ಶೇಕಡಾ 50 ಅಂಕಗಳು), ಬ್ಯಾಂಕಿಂಗ್, ಹಣಕಾಸು, ಐಟಿ, ಕೃಷಿ, ಕಾನೂನು, ನಿರ್ವಹಣೆ ಮುಂತಾದ ವಿಷಯಗಳಿಗೆ ಆದ್ಯತೆ. ಕನಿಷ್ಠ 5 ವರ್ಷಗಳ ಅಧಿಕಾರಿ ಮಟ್ಟದ ಅನುಭವ.

ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಎಷ್ಟು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿ ಸೆಪ್ಟೆಂಬರ್ 1, 2025 ರಂತೆ ಕೆಳಗೆ ನೀಡಲಾದಂತಿರಬೇಕು-

ಕಚೇರಿ ಸಹಾಯಕ (ಗುಮಾಸ್ತ) : 18 ರಿಂದ 28 ವರ್ಷಗಳು

ಆಫೀಸರ್ ಸ್ಕೇಲ್ I (PO) : 18 ರಿಂದ 30 ವರ್ಷಗಳು

ಆಫೀಸರ್ ಸ್ಕೇಲ್ II (ಮ್ಯಾನೇಜರ್) : 21 ರಿಂದ 32 ವರ್ಷಗಳು

ಆಫೀಸರ್ ಸ್ಕೇಲ್ III (ಸೀನಿಯರ್ ಮ್ಯಾನೇಜರ್) : 21 ರಿಂದ 40 ವರ್ಷಗಳು

ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಸಿಗಲಿದೆ- ಎಸ್‌ಸಿ, ಎಸ್‌ಟಿ 5 ವರ್ಷಗಳು, ಒಬಿಸಿ 3 ವರ್ಷಗಳು, ಪಿಡಬ್ಲ್ಯೂಡಿ 10 ವರ್ಷಗಳು ಮತ್ತು ಇತರ ವರ್ಗಗಳಿಗೆ ವಿಭಿನ್ನ ನಿಯಮಗಳು ಅನ್ವಯವಾಗುತ್ತವೆ.

IBPS RRB PO ಕ್ಲರ್ಕ್ ನೇಮಕಾತಿಗೆ ಸಂಬಂಧಿಸಿದ ಪ್ರಮುಖ ದಿನಾಂಕ ಮತ್ತು ವಿವರಗಳು.!

ಪ್ರಿಲಿಮ್ಸ್ ಪ್ರವೇಶ ಪತ್ರ: ನವೆಂಬರ್-ಡಿಸೆಂಬರ್‌ನಲ್ಲಿ ಬಿಡುಗಡೆಯಾಗಲಿದೆ.

ಪೂರ್ವಭಾವಿ ಪರೀಕ್ಷೆ : ನವೆಂಬರ್-ಡಿಸೆಂಬರ್ 2025ರಲ್ಲಿ ನಡೆಯಲಿದೆ.

ಪೂರ್ವಭಾವಿ ಪರೀಕ್ಷೆಯ ಫಲಿತಾಂಶ : ಡಿಸೆಂಬರ್ 2025 ಅಥವಾ ಜನವರಿ 2026 ರಲ್ಲಿ ಘೋಷಿಸಲಾಗುವುದು.

ಮುಖ್ಯ ಪರೀಕ್ಷೆಯ ಕರೆ ಪತ್ರ : ಡಿಸೆಂಬರ್-ಜನವರಿ ವೇಳೆಗೆ ನೀಡಲಾಗುವುದು.

ಮುಖ್ಯ ಪರೀಕ್ಷೆ : ಡಿಸೆಂಬರ್ 2025 ಅಥವಾ ಫೆಬ್ರವರಿ 2026 ರಲ್ಲಿ ನಡೆಯಲಿದೆ.

ಆಯ್ಕೆ ಪ್ರಕ್ರಿಯೆ ಏನು?

ಕಚೇರಿ ಸಹಾಯಕ (ಗುಮಾಸ್ತ) - ಮೊದಲು ನೀವು ಪೂರ್ವಭಾವಿ ಪರೀಕ್ಷೆಯನ್ನು ನೀಡಬೇಕು, ನಂತರ ಮುಖ್ಯ ಪರೀಕ್ಷೆ ಇರುತ್ತದೆ. ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಂತಿಮ ಹಂಚಿಕೆ ಮಾಡಲಾಗುತ್ತದೆ.

ಆಫೀಸರ್ ಸ್ಕೇಲ್-I (PO)- ಪ್ರಿಲಿಮ್ಸ್ ನಂತರ, ಮುಖ್ಯ ಪರೀಕ್ಷೆ ಮತ್ತು ನಂತರ ಸಂದರ್ಶನ ಸುತ್ತು ಇರುತ್ತದೆ. ಸಂದರ್ಶನವನ್ನು ನೋಡಲ್ RRBಗಳು ಮತ್ತು NABARD ಜಂಟಿಯಾಗಿ ನಡೆಸುತ್ತವೆ.

ಆಫೀಸರ್ ಸ್ಕೇಲ್-II ಮತ್ತು ಸ್ಕೇಲ್-III (SO) - ಈ ಹುದ್ದೆಗಳಿಗೆ ಕೇವಲ ಒಂದು ಆನ್‌ಲೈನ್ ಪರೀಕ್ಷೆ ಇರುತ್ತದೆ, ನಂತರ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.

ಅರ್ಜಿ ಶುಲ್ಕ ಎಷ್ಟು?

ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಜಿಎಸ್‌ಟಿ ಸೇರಿದಂತೆ 175 ರೂ. ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಜಿಎಸ್‌ಟಿ ಸೇರಿದಂತೆ 850 ರೂ. ಹುದ್ದೆಗಳಿಗೆ ಅನುಗುಣವಾಗಿ ಅರ್ಹತೆ, ವಯಸ್ಸಿನ ಮಿತಿ ಮತ್ತು ಖಾಲಿ ಹುದ್ದೆಗಳ ಸಂಪೂರ್ಣ ವಿವರಗಳನ್ನು ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಅಧಿಸೂಚನೆಯಲ್ಲಿ ಕಾಣಬಹುದು.

]]>
Tue, 02 Sep 2025 10:18:55 +0530 shivuagrico
Vayubara kusitha&ವಾಯುಭಾರ ಕುಸಿತದಿಂದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ತಿಂಗಳಲ್ಲೂ ಮುಂದುವರೆಯಲಿದೆ ಮಳೆಯ ಅರ್ಭಟ https://krushirushi.in/Vayubara-kusitha-2252 https://krushirushi.in/Vayubara-kusitha-2252 Vayubara kusitha-ವಾಯುಭಾರ ಕುಸಿತದಿಂದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ತಿಂಗಳಲ್ಲೂ ಮುಂದುವರೆಯಲಿದೆ ಮಳೆಯ ಅರ್ಭಟ

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಧ್ಯ ಅಲ್ಲಲ್ಲಿ ಸಣ್ಣ ಅವಧಿಯ ಬಿಸಿಲು ಸಹ ಇರಬಹುದು.
ಈಗಿನಂತೆ  ಸೆಪ್ಟೆಂಬರ್ 2ರಿಂದ ಮಳೆ ಸ್ವಲ್ಪ ಬಿರುಸು ಪಡೆಯುವ ಮುನ್ಸೂಚನೆ ಇದೆ. ಸೆಪ್ಟೆಂಬರ್ 7ರ ತನಕ ಈ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು :  ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಸೆಪ್ಟೆಂಬರ್ 5ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ.

ಒಳನಾಡು : ಉತ್ತರ ಒಳನಾಡಿನ ದಾವಣಗೆರೆ, ವಿಜಯನಗರ, ಬಳ್ಳಾರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆ ಇರಬಹುದು. ( ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ). 
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹ ಇರಬಹುದು.

ಬಂಗಾಳಕೊಲ್ಲಿಯ ಥೈಲ್ಯಾಂಡ್ ಉತ್ತರ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಬಂಗಾಳಕೂಲ್ಲಿಯಲ್ಲಿ ಪಶ್ಚಿಮಾಭಿಮುಖವಾಗಿ ಚಲಿಸಿ ಸೆಪ್ಟೆಂಬರ್ 2ರಂದು ಪಶ್ಚಿಮ ಬಂಗಾಳ ಅಥವಾ ಒಡಿಸ್ಸಾ ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಇದರ ಪರಿಣಾಮದಿಂದ ಮುಂಗಾರು ಚುರುಕುಗೊಂಡು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.

]]>
Tue, 02 Sep 2025 06:37:53 +0530 shivuagrico
ಗೃಹಲಕ್ಷ್ಮಿ 3 ಕಂತುಗಳ 6,000 ರೂಪಾಯಿ ಹಣ ಜಮೆ ಬಗ್ಗೆ ಆದೇಶ https://krushirushi.in/Gruhalakshmi-amount https://krushirushi.in/Gruhalakshmi-amount ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಈ ಪೈಕಿ ಗೃಹಲಕ್ಷ್ಮಿ ಪ್ರಮುಖ ಯೋಜನೆಯಾಗಿದ್ದು, ಇದರ ಅಡಿಯಲ್ಲಿ ಪ್ರತಿ ಮನೆ ಯಜಮಾನಿ ಬ್ಯಾಂಕ್‌ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಹಾಕಲಾಗುತ್ತಿದೆ.

ಆದರೆ, 22, 23, 24ನೇ ಕಂತುಗಳು ಸೇರಿ 6,000 ರೂಪಾಯಿ ಬಾಕಿಯಿದೆ. ಇದು ಯಾವಾಗ ಬರಬಹುದು ಎಂಬ ಅಂದಾಜು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಇದರಡಿಯಲ್ಲಿ ನೀಡಲಾಗುವ ಪ್ರತಿ ತಿಂಗಳು 2,000 ರೂಪಾಯಿಯಿಂದ ರಾಜ್ಯದಲ್ಲಿನ ಅದೆಷ್ಟೋ ಮಹಿಳೆಯರು ತಮ್ಮ ಮನೆ ಖರ್ಚು-ವೆಚ್ಚಗಳನ್ನು ನಿಭಾಯಿಸುತ್ತಿದ್ದಾರೆ. ಆದರೆ, ಕಳೆದ ಮೂರು ಕಂತುಗಳ ಹಣ ಬಾಕಿಯಿದ್ದು, ಇದು ಯಾವಾಗ ಬರುತ್ತದೆ ಎನ್ನುವುದು ಮಹಿಳೆಯ ಪ್ರಶ್ನೆಯಾಗಿದೆ. ಅಲ್ಲದೆ, ಆಕ್ರೋಶವನ್ನು ಸಹ ಹೊರಹಾಕುತ್ತಿದ್ದಾರೆ.

ಕಳೆದ 21ನೇ ಕಂತಿನ ಹಣವನ್ನು ವರಮಹಾಲಕ್ಷ್ಮಿ ಹಬ್ಬದ ವೇಳೆ ಜಮೆ ಮಾಡಲಾಗಿತ್ತು. 22, 23, 24ನೇ ಕಂತಿನ ಹಣ ಕಳೆದ ಬಾರಿ ಹಬ್ಬದಂತೆ ಗಣೇಶ ಚತುರ್ಥಿ ದಿನದಂದು ಜಮೆಯಾಗುವ ಆಲೋಚನೆಯಲ್ಲಿ ಮಹಿಳೆಯರಿದ್ದರು. ಆದರೆ, ಈಗಾಗಲೇ ಗಣೇಶ ಚತುರ್ಥಿ ಆರಂಭವಾದರೂ ಯಾವುದೇ ಹಣ ಜಮೆಯಾಗಿಲ್ಲ ಎಂದು ಅಸಮಾಧಾನ ಹೊರಹಾಕುತ್ತಿದ್ದಾರೆ. ಇನ್ನೂ ಮುಂಬರುವ ತಿಂಗಳು ದಸರಾ ಆರಂಭ ಆಗಲಿದ್ದು, ಆ ವೇಳೆಯೇ ಮೂರು ಕಂತಿನ 6,000 ರೂಪಾಯಿ ಬ್ಯಾಂಕ್‌ ಖಾತೆಗೆ ಹಾಕುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇಲ್ಲದಿದ್ದರೆ, ಎರಡು ಕಂತಿನ 4,000 ಹಣ ಹಾಕಿ ಮುಂದಿನ ಕಂತುಗಳ ಹಣವನ್ನು ಒಟ್ಟಿಗೆ ದೀಪಾವಳಿಗೆ ಹಾಕುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಆದರೆ, ಕೆಲ ಮಹಿಳೆಯರು ಮಾತ್ರ ಈಗಎರಡು ಕಂತುಗಳ ಹಣವನ್ನಾದರೂ ಮೊದಲು ಹಾಕಿ. ಆಮೇಲೆ ಉಳಿದ ಕಂತುಗಳ ಹಣ ಜಮಾ ಮಾಡಿ ಎಂದು ಹೇಳುತ್ತಿದ್ದಾರೆ. ಮತ್ತೊಂದೆಡೆ ಇನ್ನೂ ಕೆಲವರು ಎಲ್ಲಾವನ್ನು ಹಾಕಿ ಎಂದು ಹೇಳುತ್ತಿದ್ದಾರೆ. ಇತ್ತೀಚೆಗಷ್ಟೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದಂತೆ ಶೀಘ್ರದಲ್ಲೇ ಜಮೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಗೃಹಲಕ್ಷ್ಮೀಯರ ಖಾತೆಗೆ 21ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಇನ್ನು 22ನೇ ಕಂತಿನ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಯಾಕಂದ್ರೆ 21ನೇ ಕಂತಿನ ಹಣವನ್ನು ವರಮಹಾಲಕ್ಷ್ಮೀ ಹಬ್ಬದಂದೇ ಹಾಕಲಾಗಿತ್ತು. ಹಾಗೆಯೇ ಮುಂಬರು ಹಬ್ಬದಂದೇ ಉಳಿದ ಎಲ್ಲಾ ಕಂತುಗಳು ಇಲ್ಲ ಅಂದ್ರೆ ಎರಡು ಕಂತುಗಳ ಹಣ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಆದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ ಒಟ್ಟು 1.24 ಕೋಟಿ ಫಲಾನುಭವಿಗಳು ಯಶಸ್ವಿಯಾಗಿ ಹಣ ಪಡೆದುಕೊಂಡಿದ್ದಾರೆ. ಯೋಜನೆ ಆರಂಭ ಆದಾಗಿನಿಂದ ಇಲ್ಲಿಯವರೆಗೆ ಒಟ್ಟು 1.06 ಕೋಟಿ ಫಲಾನುಭವಿಗಳು ಎಲ್ಲಾ ಕಂತುಗಳ ಧನ ಸಹಾಯ ಸ್ಪೀಕರಿಸಿದ್ದಾರೆ ಎನ್ನುವ ಮಾಹಿತಿ ಇದೆ.

2023-24ನೇ ಸಾಲಿನಲ್ಲಿ 17,000 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ವೆಚ್ಚ ಭರಿಸಲಾಗಿದೆ 2024-25ನೇ ಸಾಲಿನಲ್ಲಿ 28,608.40 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದ್ದು, ಪೂರ್ತಿ ವೆಚ್ಚ ಭರಿಸಲಾಗಿದೆ. 2025-26ನೇ ಸಾಲಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 28,608 ಕೋಟಿಗಳ ಅನುದಾನ ನಿಗದಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ-Gruhalakshmi status

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Mon, 01 Sep 2025 14:07:29 +0530 shivuagrico
PMEGP ಯೋಜನೆಯಡಿ 50 ಲಕ್ಷದವರೆಗೆ ಸಾಲ, ಶೇ. 35ರವರೆಗೆ ಸಹಾಯಧನ ಸೌಲಭ್ಯ https://krushirushi.in/loans-up-to-50-lakh-with-a-subsidy-of-up-to-35-are-available. https://krushirushi.in/loans-up-to-50-lakh-with-a-subsidy-of-up-to-35-are-available. PMEGP ಯೋಜನೆಯಡಿ 50 ಲಕ್ಷದವರೆಗೆ ಸಾಲ, ಶೇ. 35ರವರೆಗೆ ಸಹಾಯಧನ ಸೌಲಭ್ಯ


2025-26ನೇ ಸಾಲಿನ ಭಾರತ ಸರ್ಕಾರದ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನೆ /ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಹೊಸದಾಗಿ ಸ್ವಂತ ಉದ್ಯೋಗ ಆರಂಭಿಸುವ ಎಲ್ಲಾ ವರ್ಗದ ನಿರುದ್ಯೋಗ ಯುವಕ, ಯುವತಿಯರಿಂದ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಪಟ್ಟಣ, ನಗರ, ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಉದ್ದಿಮೆ ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಉತ್ಪಾದನಾ ಉದ್ದಿಮೆಗಳಿಗೆ ಗರಿಷ್ಠ 50 ಲಕ್ಷ ರೂ.ವರೆಗೆ ಹಾಗೂ ಸೇವಾ ಉದ್ದಿಮೆಗಳಿಗೆ ಗರಿಷ್ಠ 20 ಲಕ್ಷ ರೂ.ವರೆಗೆ ಸಾಲವನ್ನು ಪಡೆದರೆ ಶೇ.15 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು.

ಕಾಫಿ ಗ್ರೈಂಡಿಂಗ್, ಪ್ಲೋರ್ ಮಿಲ್, ಸಿಮೆಂಟ್ ಬ್ಲಾಕ್ಸ್, ವರ್ಮಿ ಕಾಂಪೋಸ್ಟ್, ಜೇನು ಕೃಷಿ, ಎಣ್ಣೆ ತಯಾರಿಕೆ, ರಬ್ಬರ್, ಪಶು ಆಹಾರ, ಜ್ಯೂಸ್ ತಯಾರಿಕೆ, ರೆಡಿಮೆಡ್ ಗಾರ್ಮೆಂಟ್ಸ್, ಫ್ಲೆಕ್ಸ್ ಅಂಡ್ ಪ್ರಿಂಟಿಂಗ್ ಪ್ರೆಸ್, ಬ್ಯೂಟಿ ಪಾರ್ಲರ್, ಸಲೂನ್ ಎಕ್ಸ್-ರೇ ಸ್ಕ್ಯಾನಿಂಗ್, ಮೆಡಿಕಲ್ ಲ್ಯಾಬ್, ಅಡಿಕೆ ತಟ್ಟೆ ತಯಾರಿಕೆ, ಪೇಪರ್ ಪ್ಲೇಟ್ಸ್ ಮತ್ತು ಕಪ್ಸ್, ಸೆಂಟ್ರಿಂಗ್ ವರ್ಕ್ಸ್, ವೆಲ್ಡಿಂಗ್, ವಾಟರ್ ಸರ್ವೀಸ್ ಸ್ಟೇಷನ್, ಹಸು, ಕುರಿ, ಮೇಕೆ, ಎಮ್ಮೆ, ಕೋಳಿ, ಬಾತು ಕೋಳಿ, ಮೀನು ಸಾಕಾಣಿಕೆ ಹಾಗೂ ಸಸ್ಯಹಾರಿ ಮತ್ತು ಮಾಂಸಾಹಾರಿ ಹೋಟೆಲ್ ಮತ್ತು ಇತರೆ 630 ಕ್ಕೂ ಅಧಿಕ ಉದ್ದಿಮೆಗಳಿಗೆ ಸಾಲ ಸಹಾಯಧನ ನೀಡಲಾಗುವುದು. ಈ ಸೌಲಭ್ಯವನ್ನು ಪಡೆಯಲು ಆನ್‍ಲೈನ್ ಮೂಲಕ https://www.kviconline.gov.in (ಪಿಎಂಇಜಿಪಿ) ನಲ್ಲಿ ಅರ್ಜಿ ಸಲ್ಲಿಸುವಾಗ ಏಜೆನ್ಸಿ ಕೆವಿಐಬಿ ಎಂದು ಅಳವಡಿಸಿ ಅರ್ಜಿ ಸಲ್ಲಿಸುವುದು.

ಹೆಚ್ಚಿನ ವಿವರಗಳಿಗೆ ಹೆಚ್.ಆರ್.ಸುಧಾಮ, ಜಿಲ್ಲಾ ಅಭಿವೃದ್ಧಿ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಕೊಹಿನೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇವರ ಕಚೇರಿಯನ್ನು ಹಾಗೂ ದೂ.ಸಂ. 08272-225946 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಭಿವೃದ್ಧಿ ಅಧಿಕಾರಿ ಅವರು ತಿಳಿಸಿದ್ದಾರೆ.

]]>
Mon, 01 Sep 2025 12:51:15 +0530 shivuagrico
Commercial LPG Cylinder Price: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ 51.50 ರೂ. ಇಳಿಕೆ https://krushirushi.in/Commercial-LPG-Cylinder-Price-decreased https://krushirushi.in/Commercial-LPG-Cylinder-Price-decreased ದೇಶೀಯ ತೈಲ ಮಾರುಕಟ್ಟೆ ಕಂಪನಿಗಳು (Oil Marketing Companies) ಭಾನುವಾರ (ಆಗಸ್ಟ್ 31) 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ (Commercial LPG Cylinder Price) 51.50 ರೂ. ಇಳಿಕೆ ಮಾಡಿವೆ. ಇದರಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಆಹಾರೋದ್ಯಮಗಳಿಗೆ ಸ್ವಲ್ಪ ಮಟ್ಟಿಗೆ ಪರಿಹಾರ ಸಿಕ್ಕಂತಾಗಿದೆ.

ಪರಿಷ್ಕೃತ ದರಗಳು ಇಂದಿನಿಂದಲೇ (ಸೆಪ್ಟೆಂಬರ್ 1) ರಿಂದ ಜಾರಿಗೆ ಬಂದಿವೆ. ಪರಿಷ್ಕೃತ ಬೆಲೆಯ ಪ್ರಕಾರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಈಗ 1,580 ರೂ. ಆಗಿದ್ದು, ಪ್ರತಿ ಸಿಲಿಂಡರ್‌ಗೆ (LPG Cylinder) 51.50 ರೂ.ಗಳ ಕಡಿತ ಆಗಿದೆ. ಜಾಗತಿಕ ಇಂಧನ ಬೆಲೆ ಮತ್ತು ಇನ್‌ಪುಟ್ ವೆಚ್ಚಗಳಿಗೆ ಸಂಬಂಧಿಸಿದ ನಿಯಮಿತ ಮಾಸಿಕ ಪರಿಷ್ಕರಣೆಗಳ ಭಾಗವಾಗಿ ಈ ದರ ಇಳಿಕೆ ಕಡಿತ ಮಾಡಲಾಗಿದೆ ಎಂದು ಉದ್ಯಮ ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ ವಾಣಿಜ್ಯ ಬಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಎಷ್ಟು?

ಬೆಂಗಳೂರಿನಲ್ಲಿ ವಾಣಿಜ್ಯ ಬಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಈ 51.50 ರೂ. ಇಳಿಕೆಯೊಂದಿಗೆ 1,653 ರೂ. ಆಗಿದೆ. ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಈಗಿರುವ 855.50 ರೂ. ಮುಂದುವರಿದಿದೆ. ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್ 5 ಕೆಜಿಗೆ 318.50 ರೂ. ಆಗಿದೆ. ವಾಣಿಜ್ಯ ಬಕೆಯ ಎಲ್​ಪಿಜಿ ಸಿಲಿಂಡರ್ 47.5 ಕೆಜಿದಕ್ಕೆ 4,129 ರೂ. ಆಗಿದೆ. ಅಂದರೆ, ಇದರ ಬೆಲೆ 127 ರೂ. ಇಳಿಕೆಯಾಗಿದೆ.

ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆ ಇಲ್ಲ

ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಮನೆಗಳಲ್ಲಿ ಅಡುಗೆಗೆ ಬಳಸುವ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಯಾಸ್ಥಿತಿ ಕಾಯ್ದಕೊಳ್ಳಲಾಗಿದೆ.

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆಯು ದೈನಂದಿನ ಕಾರ್ಯಾಚರಣೆಗಳಿಗೆ ವಾಣಿಜ್ಯ ಸಿಲಿಂಡರ್‌ಗಳನ್ನು ಹೆಚ್ಚು ಅವಲಂಬಿಸಿರುವ ತಿಂಡಿ ತಿನಿಸು ಮಾರಾಟ ಉದ್ಯಮ, ಹೋಟೆಲ್‌ಗಳು, ಢಾಬಾಗಳು ಮತ್ತು ಸಣ್ಣ ಪ್ರಮಾಣದ ಆಹಾರ ವ್ಯವಹಾರಗಳಿಗೆ ತುಸು ರಿಲೀಫ್ ನೀಡುವ ನಿರೀಕ್ಷೆಯಿದೆ. ಸಣ್ಣ ಮಟ್ಟಿನ ದರ ಇಳಿಕೆ ಇದಾಗಿದ್ದರೂ, ವಿಶೇಷವಾಗಿ ಬೇಡಿಕೆ ಹೆಚ್ಚಿರುವ ನಗರ ಕೇಂದ್ರಗಳಲ್ಲಿ ಕಾರ್ಯಾಚರಣೆಯ ವೆಚ್ಚವನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಲಿದೆ ಎಂದು ಉದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ.

ಅಂತರರಾಷ್ಟ್ರೀಯ ಇಂಧನ ಬೆಲೆ ಏರಿಳಿತ ಮತ್ತು ವಿದೇಶಿ ವಿನಿಮಯ ದರಗಳಲ್ಲಿನ ಏರಿಳಿತಗಳನ್ನು ಆಧರಿಸಿ ತೈಲ ಮಾರುಕಟ್ಟೆ ಕಂಪನಿಗಳು ಎಲ್​ಪಿಜಿ ದರಗಳನ್ನು ಪ್ರತಿ ತಿಂಗಳು ಪರಿಷ್ಕರಿಸುತ್ತವೆ.

]]>
Mon, 01 Sep 2025 11:07:48 +0530 shivuagrico
ಸೆ. 3&4 ಕ್ಕೆ ಮತ್ತೆ ಮಳೆ ಆರ್ಭಟ ಜೋರು: ಆರೆಂಜ್ ಅಲರ್ಟ್, ಮಳೆ ಮುನ್ಸೂಚನೆ ಏನಿದೆ? https://krushirushi.in/Karnataka-Rain-alert-for-September https://krushirushi.in/Karnataka-Rain-alert-for-September ರಾಜ್ಯದ ಕರಾವಳಿಯಲ್ಲಿ ಈ ಒಂದು ವಾರ ವ್ಯಾಪಕವಾಗಿ ಮಳೆಯಾಗಲಿದ್ದು, ಒಳನಾಡಿನಲ್ಲಿ ಸಾಧಾರಣವಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚೆನ್ನೈ ಮೇಘಸ್ಪೋಟದ ಕಾರಣ ಬೆಂಗಳೂರಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಈ ವಾರ ಪೂರ್ತಿ ಯೆಲ್ಲೋ ಅಲರ್ಟ್ ಇದ್ದು, ಸೆ,3 ಹಾಗೂ 4 ಮಳೆ ಆರ್ಭಟ ಹೆಚ್ಚು ಇರುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಸೆ.2 ಮತ್ತು 3 ರಂದು ಸಾಧಾರಣ ಮಳೆಯಾಗಲಿದ್ದು, ಉಳಿದ ನಾಲ್ಕು ದಿನ ಅತಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೋಮವಾರ ಸಾಧಾರಣ ಮಳೆಯಾಗಲಿದ್ದು, ಆನಂತರದ ಆರು ದಿನ ಅತಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಭಾರಿ ಮಳೆ ಸಾಧ್ಯತೆ:

ತಮಿಳುನಾಡಿನ ಚೆನ್ನೈನಲ್ಲಿ ಭಾನುವಾರ ಮೇಘ ಸ್ಫೋಟವಾದ ಹಿನ್ನೆಲೆಯಲ್ಲಿ ಭಾರಿ ಮಳೆಯಾಗಿದೆ. ದಕ್ಷಿಣ ಬೆಂಗಳೂರಿನ ಭಾಗಗಳಲ್ಲಿ 2 ಗಂಟೆಗೂ ಹೆಚ್ಚು ಕಾಲ ಮಳೆ ಆರ್ಭಟಿಸಿದ್ದು, ತಗ್ಗು ರಸ್ತೆಗಳಲ್ಲಿ ನೀರು ನಿಂತಿತ್ತು. ವಾಹನ ಸವಾರರು ಟ್ರಾಫಿಕ್ ಜಾಂಗೆ ಸಿಲುಕಿ ಪರದಾಡಿದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಸುತ್ತಮುತ್ತ ಸೋಮವಾರ ಮತ್ತು ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಸೋಮವಾರ ಎಲ್ಲೆಲ್ಲಿ ಮಳೆ ಅಲರ್ಟ್?

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಗೆ ಇಂದು ಭಾರಿ ಮಳೆ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ನಾಳೆಯ ಹವಾಮಾನ

ಸೆಪ್ಟೆಂಬರ್ 2 ಮಂಗಳವಾರದಂದು, ಕರಾವಳಿಯ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಗೆ ಇಂದು ಭಾರಿ ಮಳೆ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಈ ನಡುವೆ, ಕರಾವಳಿಯ ಅನೇಕ ಕಡೆ, ಒಳನಾಡಿನ ಕೆಲವೆಡೆ ಭಾನುವಾರ ಮಳೆಯಾಗಿದೆ. ಪ್ರಮುಖವಾಗಿ, ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ, ಶಿವಮೊಗ್ಗ ಜಿಲ್ಲೆಯ ಆಗುಂಬೆ, ದ.ಕ. ಜಿಲ್ಲೆಯ ಮೂಡಬಿದರೆಯಲ್ಲಿ ತಲಾ 6 ಸೆಂ.ಮೀ., ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ.

]]>
Mon, 01 Sep 2025 10:34:09 +0530 shivuagrico
PM&Swanidhi&Yojana&date&extented&ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್ : 'ಪಿಎಂ ಸ್ವನಿಧಿ ಯೋಜನೆ' ಮಾ.31, 2030ರವರೆಗೆ ವಿಸ್ತರಣೆ | PM Swanidhi Yojana https://krushirushi.in/PM-Swanidhi-Yojana-date-extented https://krushirushi.in/PM-Swanidhi-Yojana-date-extented PM-Swanidhi-Yojana-date-extented-ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್ : 'ಪಿಎಂ ಸ್ವನಿಧಿ ಯೋಜನೆ' ಮಾ.31, 2030ರವರೆಗೆ ವಿಸ್ತರಣೆ | PM Swanidhi Yojana


ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, "ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯ 31.12.2024 ರ ನಂತರವೂ ಸಾಲ ನೀಡುವ ಅವಧಿಯನ್ನು ಪುನರ್ರಚನೆ ಮತ್ತು ವಿಸ್ತರಿಸಲು" ಅನುಮೋದನೆ ನೀಡಿದೆ.

ಸಾಲ ನೀಡುವ ಅವಧಿಯನ್ನು ಈಗ ಮಾರ್ಚ್ 31, 2030 ರವರೆಗೆ ವಿಸ್ತರಿಸಲಾಗಿದೆ.

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, "ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (PM SWANidhi) ಯೋಜನೆಯ 31.12.2024 ರ ನಂತರವೂ ಸಾಲ ನೀಡುವ ಅವಧಿಯನ್ನು ಪುನರ್ರಚಿಸಲು ಮತ್ತು ವಿಸ್ತರಿಸಲು" ಅನುಮೋದನೆ ನೀಡಿದೆ. ಸಾಲ ನೀಡುವ ಅವಧಿಯನ್ನು ಈಗ ಮಾರ್ಚ್ 31, 2030 ರವರೆಗೆ ವಿಸ್ತರಿಸಲಾಗಿದೆ. ಈ ಯೋಜನೆಯ ಒಟ್ಟು ವೆಚ್ಚ *7,332 ಕೋಟಿ. ಪುನರ್ರಚಿಸಲಾದ ಯೋಜನೆಯು 50 ಲಕ್ಷ ಹೊಸ ಫಲಾನುಭವಿಗಳನ್ನು ಒಳಗೊಂಡಂತೆ 1.15 ಕೋಟಿ ಫಲಾನುಭವಿಗಳಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ.

ಯೋಜನೆಯ ಅನುಷ್ಠಾನವು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (MOHUA) ಮತ್ತು ಹಣಕಾಸು ಸೇವೆಗಳ ಇಲಾಖೆ (DFS) ಜಂಟಿ ಜವಾಬ್ದಾರಿಯಾಗಿದ್ದು, ಬ್ಯಾಂಕುಗಳು/ಹಣಕಾಸು ಸಂಸ್ಥೆ ಮತ್ತು ಅವುಗಳ ತಳಮಟ್ಟದ ಕಾರ್ಯಕಾರಿಗಳ ಮೂಲಕ ಸಾಲ/ಕ್ರೆಡಿಟ್ ಕಾರ್ಡ್‌ಗಳಿಗೆ ಪ್ರವೇಶವನ್ನು ಸುಗಮಗೊಳಿಸುವ ಜವಾಬ್ದಾರಿಯನ್ನು DFS ಹೊಂದಿದೆ.

ಪುನರ್ರಚಿಸಲಾದ ಯೋಜನೆಯ ಪ್ರಮುಖ ಲಕ್ಷಣಗಳಲ್ಲಿ ಮೊದಲ ಮತ್ತು ಎರಡನೇ ಕಂತಿನಲ್ಲಿ ವರ್ಧಿತ ಸಾಲದ ಮೊತ್ತ, ಎರಡನೇ ಸಾಲವನ್ನು ಮರುಪಾವತಿಸಿದ ಫಲಾನುಭವಿಗಳಿಗೆ UPI-ಸಂಯೋಜಿತ ರುಪೇ ಕ್ರೆಡಿಟ್ ಕಾರ್ಡ್ ಒದಗಿಸುವುದು ಮತ್ತು ಚಿಲ್ಲರೆ ಮತ್ತು ಸಗಟು ವಹಿವಾಟುಗಳಿಗೆ ಡಿಜಿಟಲ್ ಕ್ಯಾಶ್‌ಬ್ಯಾಕ್ ಪ್ರೋತ್ಸಾಹಗಳು ಸೇರಿವೆ. ಈ ಯೋಜನೆಯ ವ್ಯಾಪ್ತಿಯನ್ನು ಶಾಸನಬದ್ಧ ಪಟ್ಟಣಗಳನ್ನು ಮೀರಿ ಜನಗಣತಿ ಪಟ್ಟಣಗಳು, ಪೆರಿ-ನಗರ ಪ್ರದೇಶಗಳು ಇತ್ಯಾದಿಗಳಿಗೆ ಶ್ರೇಣೀಕೃತ ರೀತಿಯಲ್ಲಿ ವಿಸ್ತರಿಸಲಾಗುತ್ತಿದೆ.

ವರ್ಧಿತ ಸಾಲ ರಚನೆಯಲ್ಲಿ ಮೊದಲ ಹಂತದ ಸಾಲಗಳನ್ನು ₹15,000 ಕ್ಕೆ ಹೆಚ್ಚಿಸಲಾಗಿದೆ (₹10,000 ರಿಂದ) ಮತ್ತು ಎರಡನೇ ಹಂತದ ಸಾಲಗಳನ್ನು £25,000 ಕ್ಕೆ ಹೆಚ್ಚಿಸಲಾಗಿದೆ (₹20,000 ರಿಂದ), ಆದರೆ ಮೂರನೇ ಹಂತದ ಸಾಲಗಳು ₹50,000 ಕ್ಕೆ ಬದಲಾಗದೆ ಉಳಿದಿವೆ.

UPI-ಸಂಯೋಜಿತ RUPAY ಕ್ರೆಡಿಟ್ ಕಾರ್ಡ್‌ನ ಪರಿಚಯವು ಯಾವುದೇ ತುರ್ತು ವ್ಯವಹಾರ ಮತ್ತು ವೈಯಕ್ತಿಕ ಅವಶ್ಯಕತೆಗಳನ್ನು ಪೂರೈಸಲು ಬೀದಿ ವ್ಯಾಪಾರಿಗಳಿಗೆ ತಕ್ಷಣದ ಸಾಲದ ಪ್ರವೇಶವನ್ನು ಒದಗಿಸುತ್ತದೆ.

ಇದಲ್ಲದೆ, ಡಿಜಿಟಲ್ ಅಳವಡಿಕೆಗೆ ಉತ್ತೇಜನ ನೀಡುವ ಸಲುವಾಗಿ, ಬೀದಿ ವ್ಯಾಪಾರಿಗಳು ಚಿಲ್ಲರೆ ಮತ್ತು ಸಗಟು ವಹಿವಾಟುಗಳನ್ನು ಮಾಡುವಲ್ಲಿ ₹1,600 ವರೆಗೆ ಕ್ಯಾಶ್‌ಬ್ಯಾಕ್ ಪ್ರೋತ್ಸಾಹವನ್ನು ಪಡೆಯಬಹುದು.

ಈ ಯೋಜನೆಯು ಉದ್ಯಮಶೀಲತೆ, ಆರ್ಥಿಕ ಸಾಕ್ಷರತೆ, ಡಿಜಿಟಲ್ ಕೌಶಲ್ಯಗಳು ಮತ್ತು ಒಮ್ಮುಖದ ಮೂಲಕ ಮಾರುಕಟ್ಟೆಯ ಮೇಲೆ ಕೇಂದ್ರೀಕರಿಸಿ ಬೀದಿ ವ್ಯಾಪಾರಿಗಳ ಸಾಮರ್ಥ್ಯವನ್ನು ನಿರ್ಮಿಸುವತ್ತ ಗಮನಹರಿಸುತ್ತದೆ. FSSAI ಸಹಭಾಗಿತ್ವದಲ್ಲಿ ಬೀದಿ ಆಹಾರ ಮಾರಾಟಗಾರರಿಗೆ ಪ್ರಮಾಣಿತ ನೈರ್ಮಲ್ಯ ಮತ್ತು ಆಹಾರ ಸುರಕ್ಷತಾ ತರಬೇತಿಗಳನ್ನು ನಡೆಸಲಾಗುವುದು.

ಬೀದಿ ವ್ಯಾಪಾರಿಗಳು ಮತ್ತು ಅವರ ಕುಟುಂಬಗಳ ಸಮಗ್ರ ಕಲ್ಯಾಣ ಮತ್ತು ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು, ಮಾಸಿಕ ಲೋಕ ಕಲ್ಯಾಣ ಮೇಳಗಳ ಮೂಲಕ 'ಸ್ವನಿಧಿ ಸೇ ಸಮೃದ್ಧಿ' ಘಟಕವನ್ನು ಮತ್ತಷ್ಟು ಬಲಪಡಿಸಲಾಗುವುದು. ವಿವಿಧ ಗೋಲ್ ಯೋಜನೆಗಳ ಅಡಿಯಲ್ಲಿ ಪ್ರಯೋಜನಗಳು ಫಲಾನುಭವಿಗಳು ಮತ್ತು ಅವರ ಕುಟುಂಬಗಳಿಗೆ ಸ್ಯಾಚುರೇಶನ್ ವಿಧಾನದಲ್ಲಿ ತಲುಪುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ.

COVID-19 ಸಾಂಕ್ರಾಮಿಕ ಸಮಯದಲ್ಲಿ ಅಭೂತಪೂರ್ವ ಕಷ್ಟಗಳನ್ನು ಎದುರಿಸಿದ ಬೀದಿ ವ್ಯಾಪಾರಿಗಳನ್ನು ಬೆಂಬಲಿಸಲು ಸರ್ಕಾರ ಆರಂಭದಲ್ಲಿ ಜೂನ್ 1, 2020 ರಂದು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯನ್ನು ಪ್ರಾರಂಭಿಸಿತ್ತು. ಆದಾಗ್ಯೂ, ಯೋಜನೆಯ ಪ್ರಾರಂಭದಿಂದಲೂ ಇದು ಬೀದಿ ವ್ಯಾಪಾರಿಗಳಿಗೆ ಹಣಕಾಸಿನ ಬೆಂಬಲಕ್ಕಿಂತ ಹೆಚ್ಚಿನದಾಗಿದೆ ಎಂದು ಸಾಬೀತಾಗಿದೆ ಮತ್ತು ಆರ್ಥಿಕತೆಗೆ ಅವರ ಕೊಡುಗೆಗಾಗಿ ಅವರಿಗೆ ಗುರುತಿನ ಪ್ರಜ್ಞೆ ಮತ್ತು ಔಪಚಾರಿಕ ಮನ್ನಣೆಯನ್ನು ನೀಡಿದೆ.

ಪ್ರಸಿದ್ಧ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಈಗಾಗಲೇ ಗಮನಾರ್ಹ ಮೈಲಿಗಲ್ಲುಗಳನ್ನು ಸಾಧಿಸಿದೆ. ಜುಲೈ 30, 2025 ರ ಹೊತ್ತಿಗೆ, ₹13,797 ಕೋಟಿ ಮೊತ್ತದ 96 ಲಕ್ಷಕ್ಕೂ ಹೆಚ್ಚು ಸಾಲಗಳನ್ನು 68 ಲಕ್ಷಕ್ಕೂ ಹೆಚ್ಚು ಬೀದಿ ವ್ಯಾಪಾರಿಗಳಿಗೆ ವಿತರಿಸಲಾಗಿದೆ. ಸುಮಾರು 47 ಲಕ್ಷ ಡಿಜಿಟಲ್ ಸಕ್ರಿಯ ಫಲಾನುಭವಿಗಳು 36.09 ಲಕ್ಷ ಕೋಟಿ ಮೌಲ್ಯದ 557 ಕೋಟಿಗೂ ಹೆಚ್ಚು ಡಿಜಿಟಲ್ ವಹಿವಾಟುಗಳನ್ನು ನಡೆಸಿದ್ದು, ಒಟ್ಟು 241 ಕೋಟಿ ಕ್ಯಾಶ್‌ಬ್ಯಾಕ್ ಗಳಿಸಿದ್ದಾರೆ. 'ಸ್ವನಿಧಿ ಸೆ ಸಮೃದ್ಧಿ' ಉಪಕ್ರಮದಡಿಯಲ್ಲಿ, 3,564 ನಗರ ಸ್ಥಳೀಯ ಸಂಸ್ಥೆಗಳಲ್ಲಿ (ULBS) 46 ಲಕ್ಷ ಫಲಾನುಭವಿಗಳನ್ನು ಪ್ರೊಫೈಲ್ ಮಾಡಲಾಗಿದೆ, ಇದು 1.38 ಕೋಟಿಗೂ ಹೆಚ್ಚು ಯೋಜನೆಗಳ ಅನುಮೋದನೆಗೆ ಕಾರಣವಾಗಿದೆ.

ಈ ಯೋಜನೆಯು ರಾಷ್ಟ್ರೀಯ ಮನ್ನಣೆಯನ್ನು ಪಡೆದಿದೆ, ಆರ್ಥಿಕತೆಯನ್ನು ಉತ್ತೇಜಿಸಲು, ಜೀವನೋಪಾಯವನ್ನು ಉತ್ತೇಜಿಸಲು, ಆರ್ಥಿಕ ಸೇರ್ಪಡೆಯನ್ನು ಉತ್ತೇಜಿಸಲು ಮತ್ತು ಡಿಜಿಟಲ್ ಸಬಲೀಕರಣವನ್ನು ಚಾಲನೆ ಮಾಡಲು ನೀಡಿದ ಅತ್ಯುತ್ತಮ ಕೊಡುಗೆಗಾಗಿ ನಾವೀನ್ಯತೆಗಾಗಿ (ಕೇಂದ್ರ ಮಟ್ಟ) ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನ ಮಂತ್ರಿ ಪ್ರಶಸ್ತಿ (2023) ಮತ್ತು ಡಿಜಿಟಲ್ ರೂಪಾಂತರಕ್ಕಾಗಿ ಸರ್ಕಾರಿ ಪ್ರಕ್ರಿಯೆ ಪುನರ್ನಿರ್ಮಾಣದಲ್ಲಿ ಶ್ರೇಷ್ಠತೆಗಾಗಿ ಬೆಳ್ಳಿ ಪ್ರಶಸ್ತಿ (2022) ಗೆದ್ದಿದೆ.

ಯೋಜನೆಯ ವಿಸ್ತರಣೆಯು ವ್ಯಾಪಾರ ವಿಸ್ತರಣೆ ಮತ್ತು ಸುಸ್ಥಿರ ಬೆಳವಣಿಗೆಗೆ ಅವಕಾಶಗಳನ್ನು ಬೆಂಬಲಿಸಲು ವಿಶ್ವಾಸಾರ್ಹ ಹಣಕಾಸಿನ ಮೂಲವನ್ನು ನೀಡುವ ಮೂಲಕ ಬೀದಿ ವ್ಯಾಪಾರಿಗಳ ಸಮಗ್ರ ಅಭಿವೃದ್ಧಿಯನ್ನು ಕಲ್ಪಿಸುತ್ತದೆ. ಇದು ಬೀದಿ ವ್ಯಾಪಾರಿಗಳನ್ನು ಸಬಲೀಕರಣಗೊಳಿಸುವುದಲ್ಲದೆ, ಎಲ್ಲರನ್ನೂ ಒಳಗೊಂಡ ಆರ್ಥಿಕ ಬೆಳವಣಿಗೆ, ಬೀದಿ ವ್ಯಾಪಾರಿಗಳು ಮತ್ತು ಅವರ ಕುಟುಂಬಗಳ ಸಾಮಾಜಿಕ-ಆರ್ಥಿಕ ಉನ್ನತಿ, ಅವರ ಜೀವನೋಪಾಯವನ್ನು ಹೆಚ್ಚಿಸುತ್ತದೆ ಮತ್ತು ಅಂತಿಮವಾಗಿ ನಗರ ಸ್ಥಳಗಳನ್ನು ರೋಮಾಂಚಕ, ಸ್ವಾವಲಂಬಿ ಪರಿಸರ ವ್ಯವಸ್ಥೆಯಾಗಿ ಪರಿವರ್ತಿಸುತ್ತದೆ.

]]>
Mon, 01 Sep 2025 09:16:16 +0530 shivuagrico
Society loan&ಸೊಸೈಟಿಯಲ್ಲಿ ರೈತರಿಗೆ ಸಿಗುವ ಸಾಲಗಳ ಪಟ್ಟಿ ಬಿಡುಗಡೆ https://krushirushi.in/Society-loan-2246 https://krushirushi.in/Society-loan-2246 Society loan-ಸೊಸೈಟಿಯಲ್ಲಿ ರೈತರಿಗೆ ಸಾಲಗಳ ಪಟ್ಟಿ ಬಿಡುಗಡೆ

ರಾಜ್ಯದ ರೈತರ ಅನುಕೂಲಕ್ಕಾಗಿ ಸರ್ಕಾರದಿಂದ ವಿವಿಧ ಯೋಜನೆಗಳಿದ್ದಾವೆ. ಅದರೊಟ್ಟಿಗೆ ರಾಜ್ಯದಲ್ಲಿ ಸಹಕಾರಿ ಸಂಸ್ಥೆಗಳಿಂದ ರೈತರಿಗೆ ವಿವಿಧ ಸಾಲಸೌಲಭ್ಯಗಳು ಕೂಡ ದೊರೆಯುತ್ತಿವೆ.


ಈ ಬಗ್ಗೆ ಕಳೆದ ಮುಂಗಾರು ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಬುಡ್ನ ಸಿದ್ದಿ ಕೇಳಿದಂತ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಉತ್ತರ ನೀಡಿದ್ದಾರೆ.

ಹಾಗಾದ್ರೇ ಸಹಕಾರಿ ಸಂಸ್ಥೆಗಳಿಂದ ರೈತರಿಗೆ ದೊರೆಯುವ ವಿವಿಧ ಸಾಲಗಳು ಯಾವುವು ಎನ್ನುವ ಮಾಹಿತಿ ಈ ಕೆಳಗಿದೆ.

ರೈತರಿಗೆ ಸಿಗಲಿವೆ ಸಹಕಾರಿ ಸಂಸ್ಥೆಗಳಿಂದ ಈ ಸಾಲ ಸೌಲಭ್ಯಗಳು

ರೂ.5 ಲಕ್ಷಗಳವರೆಗಿನ ಅಲ್ಪಾವಧಿ ಬೆಳೆ ಸಾಲವನ್ನು ಮತ್ತು ರೂ.2 ಲಕ್ಷದವರೆಗೆ ಪಶುಸಂಗೋಪನೆ, ಮೀನುಗಾರಿಕೆ ಉದ್ದೇಶಗಳಿಗೆ ದುಡಿಯುವ ಬಂಡವಾಳದ ಸಾಲವನ್ನು ಶೂನ್ಯ ಬಡ್ಡಿದರದಲ್ಲಿ ವಿತರಿಸುವ ಯೋಜನೆಯ ಜಾರಿಯಲ್ಲಿದೆ.
ರೂ.15 ಲಕ್ಷದವರೆಗೆ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಸಾಲವನ್ನು ಶೇ.3ರ ಬಡ್ಡಿದರದಲ್ಲಿ ವಿತರಣೆ.
ಸಹಕಾರಿ ಸಂಘಗಳು ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಗೋದಾಮುಗಳಲ್ಲಿ ಶೇಖರಣೆ ಮಾಡಿ, ವಿತರಿಸುವ ಅಡಮಾನ ಸಾಲವನ್ನು ಶೇ.7ರ ಬಡ್ಡಿದರದಲ್ಲಿ ನೀಡಲಾಗುತ್ತದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳ ರೈತರ ಕೃಷಿ ಉತ್ಪನ್ನ ಮತ್ತು ಪರಿಕರಗಳ ಸಾಗಾಣಿಕೆಗೆ ನಾಲ್ಕು ಚಕ್ರದ ಪಿಕಪ್ ವ್ಯಾನ್ ಖರೀದಿಸಲು ಸಹಕಾರ ಸಂಘಗಳು 7 ಲಕ್ಷದವರೆಗೆ ಸಾಲವನ್ನು ಶೇ.4ರ ಬಡ್ಡಿದರಲ್ಲಿ ವಿತರಣೆ ಮಾಡಲಾಗುತ್ತದೆ.
ರೈತರು ತಮ್ಮ ಹಾಗೂ ತಮ್ಮ ನೆರೆಹೊರೆಯ ರೈತರ ಉತ್ಪನ್ನಗಳನ್ನು ಸಂಗ್ರಹಿಸಲು ಅನುವಾಗುವಂತೆ ಗೋದಾಮು ನಿರ್ಮಿಸಲು ಬ್ಯಾಂಕುಗಳು ನೀಡುವ 20 ಲಕ್ಷದವರೆಗಿನ ಸಾಲಕ್ಕೆ ಸರ್ಕಾರ ಶೇ.7ರಷ್ಟು ಬಡ್ಡಿ ಸಹಾಯಧನ ನೀಡಲಿದೆ.
ಸಹಕಾರಿ ಸಂಘಗಳು ತಮ್ಮ ಬಂಡವಾಳ ಮತ್ತು ಮೇಲಿನ ಹಂತದ ಸಂಸ್ಥೆಗಳು ನೀಡುವ ಪುನರ್ಧನವನ್ನು ಉಪಯೋಗಿಸಿಕೊಂಡು ಸರ್ಕಾರ ನಿಗದಿಪಡಿಸಿದ ಬಡ್ಡಿದರದಲ್ಲಿ ರೈತರಿಗೆ ಸಾಲ ವಿತರಿಸಿ ಸಕಾಲದಲ್ಲಿ ವಸೂಲಾದಲ್ಲಿ ಸರ್ಕಾರದಿಂದ ನಿಯಮಿತ ಪ್ರಮಾಣದ ಬಡ್ಡಿ ಸಹಾಯಧನವನ್ನು ಒದಗಿಸಲಾಗುತ್ತಿದೆ.
ಈ ಸಾಲ ಸೌಲಭ್ಯಗಳಿಗೆ ಇರುವಂತ ನಿಬಂಧನೆಗಳು ಏನು? ಪಡೆಯುವುದು ಹೇಗೆ ಗೊತ್ತಾ?

5.00 ಲಕಗಳವರೆಗಿನ ಅಲ್ಪಾವಧಿ ಬೆಳೆ ಸಾಲವನ್ನು ಮತ್ತು 2.00 ಲಕ್ಷಗಳವರೆಗೆ ಪಶುಸಂಗೋಪನೆ/ಮೀನುಗಾರಿಕೆ ಉದ್ದೇಶಗಳಿಗೆ ದುಡಿಯುವ ಬಂಡವಾಳದ ಸಾಲವನ್ನು ಶೂನ್ಯ ಬಡ್ಡಿದರದಲ್ಲಿ ವಿತರಿಸುವ ಯೋಜನೆ

1. ಈ ಯೋಜನೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್, ಪಿಕಾರ್ಡ್ ಬ್ಯಾಂಕುಗಳು ಹಾಗೂ ಡಿಸಿಸಿ ಬ್ಯಾಂಕುಗಳು ರೂ. 5.00 ಲಕ್ಷಗಳವರೆಗಿನ ಅಲ್ಪಾವಧಿ ಬೆಳೆ ಸಾಲವನ್ನು ಮತ್ತು ರೂ.2.00 ಲಕ್ಷಗಳವರೆಗೆ ಪಶುಸಂಗೋಪನೆ/ಮೀನುಗಾರಿಕೆ ಉದ್ದೇಶಗಳಿಗೆ ದುಡಿಯುವ ಬಂಡವಾಳದ ಸಾಲವನ್ನು `ಶೂನ್ಯ ಬಡ್ಡಿದರ ಅನ್ವಯವಾಗುವಂತೆ ರೈತರಿಗೆ ವಿತರಿಸಬೇಕಿರುತ್ತದೆ.

2. ರೈತನ ಭೂಮಿ ಅಥವಾ ವಾಸ ಸ್ಥಳ ಇರುವ ಪ್ರಾಥಮಿಕ ಸಹಕಾರ ಸಂಘದಲ್ಲಿ ರೈತನು ಸಾಲಕ್ಕಾಗಿ ಅರ್ಜಿ ಸಲ್ಲಿಸಬೇಕು. ಸಂಘ ನಿಷ್ಕ್ರಿಯ ಆಗಿದ್ದಲ್ಲಿ ಸಂಬಂಧಿಸಿದ ಡಿಸಿಸಿ ಬ್ಯಾಂಕಿನಲ್ಲಿ ಅರ್ಜಿ ಸಲ್ಲಿಸಬೇಕು.

3. ರೈತನು ಸಾಲ ಪಡೆಯಲು ನೀಡುವ ಭೂ ದಾಖಲೆಗಳಲ್ಲಿ ಇತರೇ ಯಾವುದೇ ಬ್ಯಾಂಕಿನಿಂದ ಸಾಲ ಪಡೆದಿರಬಾರದು.

4. ಅಲ್ಪಾವಧಿ ಕೃಷಿ ಸಾಲ ವಿತರಿಸಲು ರೈತನು ಹೊಂದಿರುವ ಭೂಹಿಡುವಳಿಗೆ ಮತ್ತು ಬೆಳೆಯುವ ಬೆಳೆಗೆ, ರಾಜ್ಯ ತಾಂತ್ರಿಕ ಸಲಹಾ ಸಮಿತಿ ಪ್ರತೀ ಬೆಳೆಗೆ ನಿಗದಿ ಪಡಿಸಿದ ಸ್ಟೇಲ್ ಆಫ್ ಫೈನಾನ್ಸ್ ಪ್ರಕಾರ ಬೆಳೆ ಸಾಲದ ಗರಿಷ್ಟ ಮಿತಿಯಾದ ಕ್ರಮಿಕ ಪತ್ತಿನ ಮಿತಿ (NCL) ಗೆ ಸಂಬಂದಿಸಿದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳಿಂದ ಅನುಮೋದನೆ ಪಡೆದಿರತಕ್ಕದ್ದು ಹಾಗೂ ಬೆಳೆ ವಿಮೆ ಒಳಗೊಂಡಂತೆ ಸದರಿ ಮಿತಿ ಅಥವಾ ರೂ.5.00 ಲಕ್ಷ ಯಾವುದು ಕಡಿಮೆಯೋ ಆ ಮಿತಿಗೆ ಮಾತ್ರ ಸಾಲ ದೊರೆಯುತ್ತದೆ.

5. ಸಂಘಗಳು ಹೆಚ್ಚಿನ ಪ್ರಮಾಣದ ಸಾಲ ವಿತರಿಸಿದ್ದರೂ ಸಹ ಶೂನ್ಯ ಬಡ್ಡಿ ದರ ರೂ.5 ಲಕ್ಷಗಳ ವರೆಗಿನ ಸಾಲಕ್ಕೆ ಅನ್ವಯವಾಗುತ್ತದೆ.

6. ರೈತನು ಪಡೆದ ಸಾಲವನ್ನು ಸಂಘವು ನಿಗದಿಪಡಿಸಿದ ಗಡುವು ದಿನಾಂಕ ಅಥವಾ ಒಂದು ವರ್ಷ ಇದರಲ್ಲಿ ಯಾವುದು ಕಡಿಮೆಯೋ ಆ ಅವಧಿಯಲ್ಲಿ ಮರುಪಾವತಿಸಿದಲ್ಲಿ ಮಾತ್ರ ಬಡ್ಡಿ ಸಹಾಯಧನ ಲಭ್ಯವಾಗುತ್ತದೆ.

7. ಜಿಲ್ಲಾ ಸಹಕಾರ ಬ್ಯಾಂಕುಗಳು ನಬಾರ್ಡ್ ನಿಂದ ದೊರೆಯುವ ಮುನರ್ಧನ ಮತ್ತು ತಮ್ಮ ಬಂಡವಾಳದ ಲಭ್ಯತೆ ಆಧರಿಸಿ ರೈತರಿಗೆ ಸಾಲ ಮಂಜೂರು ಮಾಡಲಾಗುತ್ತದೆ.

15.00 ಲಕ್ಷಗಳವರೆಗೆ ಮದ್ಯಮಾವದಿ/ದೀರ್ಘಾವಧಿ ಕೃಷಿ ಸಾಲಗಳನ್ನು ಶೇಕಡ 3 ರ ಬಡ್ಡಿ ದರದಲ್ಲಿ ವಿತರಿಸುವ ಯೋಜನೆ.

1. ಈ ಯೋಜನೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್, ಪಿಕಾರ್ಡ್ ಬ್ಯಾಂಕುಗಳು ಹಾಗೂ ಡಿಸಿಸಿ ಬ್ಯಾಂಕುಗಳು ರೂ. 15.00 ಲಕ್ಷಗಳವರೆಗಿನ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲವನ್ನು ಶೇ.3 ರ ಬಡ್ಡಿದರ ಅನ್ವಯವಾಗುವಂತೆ ರೈತರಿಗೆ ವಿತರಿಸಿಬೇಕಿರುತ್ತದೆ.

4. ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲ ವಿತರಿಸಲು ನಬಾರ್ಡ್ ನಿಗದಿಪಡಿಸಿದ ಯುನಿಟ್ ಕಾಸ್ಟ್ ಅನ್ವಯ ಮತ್ತು ಭದ್ರತೆಯ ಮೌಲ್ಯದನ್ವಯ ಸಾಲದ ಮಿತಿಯನ್ನು ನಿಗದಿಪಡಿಸಲಾಗುತ್ತದೆ ಮತ್ತು ಸಾಲಕ್ಕೆ ಡಿಸಿಸಿ ಬ್ಯಾಂಕುಗಳ ಸಾಲ ನಿಯಮಾವಳಿಗಳನ್ವಯ ಭದ್ರತೆ ಪಡೆಯಲಾಗುತ್ತದೆ.

5. ಸಂಘಗಳು ಹೆಚ್ಚಿನ ಪ್ರಮಾಣದ ಸಾಲ ವಿತಲಿಸಿದ್ದರೂ ಸಹ ಶೇ.3 ರ ಬಡ್ಡಿ ದರ ರೂ.15 ಲಕ್ಷಗಳ ವರೆಗಿನ ಸಾಲಕ್ಕೆ ಅನ್ವಯವಾಗುತ್ತದೆ.

6. ರೈತನು ಪಡೆದ ಸಾಲವನ್ನು ಸಂಘವು ಗರಿಷ್ಟ 10 ವರ್ಷಗಳ ಅವಧಿಗೆ ನಿಗದಿಪಡಿಸಿದ ಗಡುವು ದಿನಾಂಕದೊಳಗೆ ಸಾಲ ಮರುಪಾವತಿಸಿದಲ್ಲಿ ಮಾತ್ರ ಬಡ್ಡಿ ಸಹಾಯಧನ ಲಭ್ಯವಾಗುತ್ತದೆ.

7, ಜಿಲ್ಲಾ ಸಹಕಾರ ಬ್ಯಾಂಕುಗಳು ಹಾಗೂ ಪಿಕಾರ್ಡ್ ಬ್ಯಾಂಕ್ ನಬಾರ್ಡ್ ನಿಂದ ದೊರೆಯುವ ಮನರ್ಧನ ಮತ್ತು ತಮ್ಮ ಬಂಡವಾಳದ ಲಭ್ಯತೆ ಆಧರಿಸಿ ರೈತರಿಗೆ ಸಾಲ ಮಂಜೂರು ಮಾಡಲಾಗುತ್ತದೆ.

ಅಡಮಾನ ಸಾಲ

1. ರೈತನು ಸಂಘದ ಸದಸ್ಯನಾಗಿರತ್ತಕ್ಕದ್ದು.

2. ರೈತನ ಭೂಮಿ ಅಥವಾ ವಾಸ ಸ್ಥಳ ಸಂಘದ ವ್ಯಾಪ್ತಿಯಲ್ಲಿರತಕ್ಕದ್ದು,

3. ರೈತನು ತನ್ನ ಕೃಷಿ ಉತ್ಪನ್ನಗಳನ್ನು ಸಹಕಾರ ಸಂಘಗಳ ಗೋದಾಮಿನಲ್ಲಿ ಶೇಖಲಿಸಿಡತಕ್ಕದ್ದು.

4. ಶೇಖರಣೆ ಮಾಡಿದ ಕೃಷಿ ಉತ್ಪನ್ನದ ಶೇ.70 ರಷ್ಟು ಮೌಲ್ಯ ಅಥವಾ ರೂ.2.೦೦ ಲಕ್ಷ ಇದರಲ್ಲಿ ಯಾವುದು ಕಡಿಮೆಯೋ ಆ ಮೊತ್ತದ ಸಾಲವನ್ನು ಶೇ.7 ರ ಬಡ್ಡಿ ದರದಲ್ಲಿ ಗರಿಷ್ಟ 6 ತಿಂಗಳ ಅವಧಿಗೆ ಪಡೆಯಬಹುದಾಗಿದೆ.

5. ಸರ್ಕಾರದಿಂದ ಶೇ.4.00 ರ ಬಡ್ಡಿ ಸಹಾಯಧನವನ್ನು ರೈತರ ಪರವಾಗಿ ಸಹಕಾರ ಸಂಘಗಳಿಗೆ ನೀಡಲಾಗುವುದು.

ನಾಲ್ಕು ಚಕ್ರದ ಪಿಕ್‌ಅಪ್ ವ್ಯಾನ್ (Pick-up Van) ಖಲೀದಿಸಲು ಏಳು ಲಕ್ಷ ರೂ.ವರೆಗಿನ ಸಾಲವನ್ನು ಶೇ.4 ರ ಬಡ್ಡಿ ದರದಲ್ಲಿ ವಿತರಿಸುವ ಯೋಜನೆ

1. ಈ ಯೋಜನೆಯು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಇರುವ ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳು ಅಂದರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಬೇಜಯನ್ ಸಹಕಾರ ಸಂಸ್ಥೆಗಳು. ಪಿಕಾರ್ಡ್ ಬ್ಯಾಂಕುಗಳು ರೈತರಿಗೆ ನೇರವಾಗಿ ಪಿಕ್ ಅಪ್ ವ್ಯಾನ್ ಖರೀದಿಸಲು ನೀಡುವ ಸಾಲಗಳಿಗೆ ಅನ್ವಯಿಸುತ್ತದೆ.

2. ಈ ಯೋಜನೆಯಲ್ಲಿ ಸಾಲ ಪಡೆಯಲು ರೈತರ ಸಾಗುವ ಭೂಮಿಯು ಗುಡ್ಡಗಾಡು ಪ್ರದೇಶದಲ್ಲಿರಬೇಕು, ಅಂದರೆ ರೈತರ ಹೊಲವು ಶೇ.15 ಕ್ಕಿಂತ ಹೆಚ್ಚಿನ ಸ್ಫೋಸ್ ಹೊಂದಿರಬೇಕು ಅಥವಾ ರೈತನ ಮನೆ, ತಾಲ್ಲೂಕು ಮಾರುಕಟ್ಟೆ ಮತ್ತು ಹೊಲದ ನಡುವಿನ ರಸ್ತೆಯು ಗುಡ್ಡದ ಪ್ರದೇಶಗಳನ್ನು ಹೊಂದಿರತಕ್ಕದ್ದು ಮತ್ತು ರೈತನ ಹೊಲದಲ್ಲಿ ಟ್ರಾಕ್ಟರ್ ನ್ನು ಬಳಸಿ ಉಳುಮೆ ಮಾಡದೇ ಇರಬೇಕು. ಗುಡ್ಡಗಾಡು ಪ್ರದೇಶಗಳ ಗ್ರಾಮಗಳನ್ನು ಡಿಸಿಸಿ ಬ್ಯಾಂಕುಗಳು ಜಿಲ್ಲಾಧಿಕಾರಿಯವರಿಂದ ಅನುಮೋದನೆ ಪಡೆದು ಸಂಬಂಧಿಸಿದ ಎಲ್ಲಾ ಸಹಕಾರ ಸಂಘಗಳಿಗೆ ಹಾಗೂ ಇಲಾಖಾ ಅಧಿಕಾರಿಗಳಿಗೆ ತಿಳಿಸತಕ್ಕದ್ದು. ಹಾಗೂ ಈ ಪ್ರದೇಶದಲ್ಲಿನ ಭೂಮಿ ಹೊಂದಿರುವ ರೈತರಿಗೆ ಮಾತ್ರ ಯೋಜನೆಯಲ್ಲಿ ಸಾಲ ವಿತರಿಸತಕ್ಕದ್ದು.,

3. ಈ ಯೋಜನೆಯಲ್ಲಿನ ಜಿಲ್ಲೆಗಳಲ್ಲಿ ಭೂಮಿ ಹೊಂದಿರುವ ರೈತರಿಗೆ ಗಲಿಷ್ಠ 1.75 ಟನ್ ಸಾಗಾಣಿಕೆ ಸಾಮರ್ಥ್ಯದ, ಗಲಷ್ಟ 3 ಸೀಟರ್ ಹೊಂದಿರುವ ನಾಲ್ಕು ಚಕ್ರದ ಪಿಕ್ ವ್ಯಾನ್ ಖಲೀದಿಸಲು ಈ ಜಿಲ್ಲೆಗಳ ಸಹಕಾರ ಸಂಘಗಳು ಗರಿಷ್ಟ ರೂ.7.00 ಲಕ್ಷಗಳ ವರೆಗೆ ನೀಡುವ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.

ಪ್ಯಾಕ್ಸ್ ಮತ್ತು ಪಿಕಾರ್ಡ್ ಬ್ಯಾಂಕುಗಳು ಗರಿಷ್ಟ ಶೇ.11 ರ ಬಡ್ಡಿ ದರ ಮತ್ತು ಡಿಸಿಸಿ ಬ್ಯಾಂಕುಗಳು ಗರಿಷ್ಟ 10 ರ ಬಡ್ಡಿ ದರದಲ್ಲಿ ಸಾಲ ವಿತರಿಸಬೇಕು.

5. ಪ್ರತೀ ಜಿಲ್ಲೆಯಲ್ಲಿ 100 ಫಲಾನುಭವಿಗಳಗೆ ಈ ಸೌಲಭ್ಯ ದೊರೆಯಲಿದೆ. 6. ರೈತರು ಪ್ರತೀ ಆರು ತಿಂಗಳಿಗೊಮ್ಮೆ ಗರಿಷ್ಟ 7 ವರ್ಷಗಳ ಅವಧಿಗೆ ಸಹಕಾರ ಸಂಘಗಳು ನಿಗಣಪಡಿಸಿದ ಗಡುವಿನ ದಿನಾಂಕದೊಳಗೆ ಸಾಲದ ಕಂತನ್ನು ಮರುಪಾವತಿಸಿದಲ್ಲಿ ಪ್ಯಾಕ್ಸ್ ಮತ್ತು ಪಿಕಾರ್ಡ್ ಬ್ಯಾಂಕುಗಳಿಗೆ ಶೇ.7 ಮತ್ತು ಡಿಸಿಸಿ ಬ್ಯಾಂಕುಗಳಿಗೆ ರೈತರ ಪರವಾಗಿ ಶೇ.6 ರ ಬಡ್ಡಿ ಸಹಾಯಧನ ದೊರೆಯುತ್ತದೆ. ಇದರಿಂದ ರೈತರಿಗೆ ಶೇ.4 ರ ಬಡ್ಡಿ ದರದಲ್ಲಿ ಸಾಲ ದೊರೆತಂತಾಗುತ್ತದೆ.

ರೈತರು ಗೊದಾಮು ನಿರ್ಮಿಸಲು ರೂ.20 ಲಕ್ಷಗಳ ವರೆಗೆ ಪಡೆದ ಸಾಲಗಳಿಗೆ ಶೇ.7 ರ ಬಡ್ಡಿ ಸಹಾಯಧನ ನೀಡುವುದು.

1.ಈ ಯೋಜನೆಯು ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳು ಅಂದರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಪಿಕಾರ್ಡ್ ಬ್ಯಾಂಕುಗಳು ರೈತರಿಗೆ ನೇರವಾಗಿ ಕೃಷಿ ಉತ್ಯನ್ನಗಳನ್ನು ಸಂಗ್ರಹಿಸುವ ಸಲುವಾಗಿ ಗೋದಾಮುಗಳನ್ನು ನಿರ್ಮಿಸಲು ನೀಡುವ ಸಾಲಗಳಿಗೆ ಅನ್ವಯಿಸುತ್ತದೆ.

2. ಈ ಯೋಜನೆಯಲ್ಲಿ ಪಡೆಯುವ ಸಾಲದಲ್ಲಿ ರೈತರು ಗ್ರಾಮೀಣ ಪ್ರದೇಶಗಳಲ್ಲಿರುವ ತಮ್ಮ ಗ್ರಾಮ ಪಂಚಾಯತಿ/ಪಟ್ಟಣ ಪಂಚಾಯತಿ ವ್ಯಾಪ್ತಿಯ ನಿವೇಶನಗಳಲ್ಲಿ ಅಥವಾ ಕೃಷಿ ಜಮೀನುಗಳಲ್ಲಿ Warehousing Development and Regulatory Authority / ನಬಾರ್ಡ್ ನಿಗದಿಪಡಿಸಿದ ವಿನ್ಯಾಸದನ್ವಯ ಗೋದಾಮು ನಿರ್ಮಿಸತಕ್ಕದ್ದು.

3. ಈ ಯೋಜನೆಯಲ್ಲಿ ಸಹಕಾರ ಸಂಘಗಳು ಗರಿಷ್ಟ ರೂ.20.00 ಲಕ್ಷಗಳ ವರೆಗ ನೀಡಿದ ಸಾಲಗಳಿಗೆ ಬಡ್ಡಿ ಸಹಾಯಧನ ದೊರೆಯುತ್ತದೆ. ಸಹಕಾರ ಸಂಘಗಳು ರೂ.20.00 ಲಕ್ಷಕ್ಕಿಂತ ಹೆಚ್ಚಿನ ಸಾಲ ವಿತರಿಸಿದರೂ ಸಹ ಮೊದಲ ರೂ.20.00 ಲಕ್ಷಗಳ ವರೆಗಿನ ಸಾಲದ ಹೊರಬಾಕಿಗೆ ಬಡ್ಡಿ ಸಹಾಯಧನ ದೊರೆಯುತ್ತದೆ.

4. ಸಹಕಾರ ಸಂಘಗಳು ಗರಿಷ್ಟ ಶೇ.20 ರಷ್ಟು ವಂತಿಕೆಯನ್ನು ಮಾತ್ರ ಪಡೆದು ಉಳಿದ ಮೊತ್ತವನ್ನು ಸಾಲದ ರೂಪದಲ್ಲಿ ವಿತರಿಸತಕ್ಕದ್ದು. ಸಾಲದ ಮೊತ್ತಕ್ಕೆ ಗೋದಾಮು ಮತ್ತು ಭೂಮಿಯ ಮೌಲ್ಯ ಒಳಗೊಂಡಂತೆ 1.50 ರಷ್ಟು ಮಾತ್ರ ಭದ್ರತೆ ಪಡೆಯತಕ್ಕದ್ದು.

5. ಪ್ಯಾಕ್ಸ್ ಮತ್ತು ಪಿಕಾರ್ಡ್ ಬ್ಯಾಂಕುಗಳು ಗರಿಷ್ಟ ಶೇ.11 ರ ಬಡ್ಡಿ ದರ ಮತ್ತು ಡಿಸಿಸಿ ಬ್ಯಾಂಕುಗಳು ಗರಿಷ್ಟ 10 ರ ಬಡ್ಡಿ ದರದಲ್ಲಿ ಸಾಲ ವಿತಲಿಸಿಬೇಕು.

6. ರೈತರು ಪ್ರತಿ ಆರು ತಿಂಗಳಿಗೊಮ್ಮೆ ಗರಿಷ್ಟ 7 ವರ್ಷಗಳ ಅವಧಿಗೆ ಸಹಕಾರ ಸಂಘಗಳು ನಿಗದಿಪಡಿಸಿದ ಗಡುವಿನ ದಿನಾಂಕದೊಳಗೆ ಸಾಲದ ಕಂತನ್ನು ಮರುಪಾವತಿಸಿದಲ್ಲಿ ಪ್ಯಾಕ್ಸ್ ಮತ್ತು ಪಿಕಾರ್ಡ್ ಬ್ಯಾಂಕುಗಳಿಗೆ ಶೇ.7 ಮತ್ತು ಡಿಸಿಸಿ ಬ್ಯಾಂಕುಗಳಿಗೆ ರೈತರ ಪರವಾಗಿ ಶೇ.6 ರ ಬಡ್ಡಿ ಸಹಾಯಧನ ದೊರೆಯುತ್ತದೆ. ಇದರಿಂದ ರೈತರಿಗೆ ಶೇ.4 ರ ಬಡ್ಡಿ ದರದಲ್ಲಿ ಸಾಲ ದೊರೆತಂತಾಗುತ್ತದೆ ಎಂಬುದಾಗಿ ಸಹಕಾರ ಸಂಘಗಳ ಅಪರ ನಿಬಂಧಕರು ತಿಳಿಸಿದ್ದಾರೆ.

Bele sala-37 ಲಕ್ಷ ರೈತರಿಗೆ 28 ಸಾವಿರ ಕೋಟಿ ಬೆಳೆಸಾಲ ವಿತರಣೆ,ನಿಮಗೇಷ್ಟು ಬೆಳೆಸಾಲ ವಿತರಣೆಯಾಗಿದೆ ಚೆಕ್ ಮಾಡಿ


ಸಿಎಂ ಸಿದ್ದರಾಮಯ್ಯ(Siddaramaiah) ಅಧ್ಯಕ್ಷತೆಯಲ್ಲಿ ಇಂದು ಗೃಹಕಚೇರಿ ಕೃಷ್ಣಾದಲ್ಲಿ ಸಹಕಾರ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಲಾಗಿದೆ. ಕರ್ನಾಟಕದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ (farmers) ರೂ. 28 ಸಾವಿರ ಕೋಟಿ ಸಾಲ ವಿತರಣೆಯ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8,362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ.

ರೈತರಿಗೆ ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನು ಪ್ರತಿ ಜಿಲ್ಲೆಯಲ್ಲೂ ಖಾತ್ರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಹಕಾರ ಸಚಿವರಾಗಿದ್ದ ಕೆ.ಎನ್.ರಾಜಣ್ಣ ವಜಾಗೊಂಡ ನಂತರ ಮೊದಲ ಪ್ರಗತಿ ಪರಿಶೀಲನಾ ಸಭೆ ಇದಾಗಿದೆ. ರಾಜಣ್ಣ ವಜಾ ನಂತರ ಸಿಎಂ ಬಳಿಯೇ ಸಹಕಾರ ಖಾತೆ ಇದೆ. ಹೀಗಾಗಿ ಪ್ರಗತಿ ಪರಿಶೀಲನಾ ಸಭೆ ಮಾಡಿದರು.

ಸಭೆಯ ಮುಖ್ಯಾಂಶಗಳು ಹೀಗಿವೆ

ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ ರೂ.5,600 ಕೋಟಿಗಳಿಂದ ರೂ.3,236.11 ಕೋಟಿಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೇ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ.
ಅನ್ನಭಾಗ್ಯ ಅಕ್ಕಿ ಕೊಪ್ಪಳದಿಂದ ದುಬೈಗೆ ಕಳ್ಳ ಸಾಗಾಟ? 'ಟಿವಿ9' ವರದಿ ಬೆನ್ನಲ್ಲೇ ನಾಲ್ವರ ವಿರುದ್ಧ ಎಫ್​ಐಆರ್

ರಾಜ್ಯದಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ ಸಂಘಗಳು ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಇದರಲ್ಲಿ 2,200 ಹಾಲು ಉತ್ಪಾದಕ ಸಂಘಗಳು ನಷ್ಟದಲ್ಲಿವೆ. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾ ಇರಿಸಬೇಕು. ಹಾಲು ಉತ್ಪಾದನೆಯನ್ನು ಹೆಚ್ಚಿಸುವುದು ಸಂಘಗಳ ಕಾರ್ಯದರ್ಶಿಗಳ ಜವಾಬ್ದಾರಿ. ಹಾಲು ಉತ್ಪಾದಕ ಸಹಕಾರ ಸಂಘಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.


ಕನ್ನಡ ಸಾಹಿತ್ಯ ಪರಿಷತ್‌ನ ಅವ್ಯವಹಾರಗಳ ಕುರಿತು ಡಿಆರ್‌ಸಿಎಸ್ ತನಿಖೆ ನಡೆಸುತ್ತಿದೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಕೆಲವು ಸದಸ್ಯರ ಸದಸ್ಯತ್ವವನ್ನು ಪರಿಷತ್ ರದ್ದುಪಡಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಈ ಕುರಿತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸೂಚನೆ.
ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಬೇಕು.
ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.


ರಾಜ್ಯದಲ್ಲಿ 7,074 ಗಿರವಿದಾರ ಸಂಸ್ಥೆಗಳು ಹಾಗೂ 1,468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಸಂಸ್ಥೆಗಳು ಹಾಗೂ ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು.

ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಹಕಾರ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸೂಚಿಸಿದ್ದಾರೆ.

Sala manna-ರೈತರ ಸಾಲಮನ್ನಾದ 300 ಕೋಟಿ ಬಾಕಿ ತಿರಿಸುತ್ತೇವೆ-ಸಿಎಂ ಸಿದ್ದರಾಮಯ್ಯ

ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ರೈತರ ಸಾಲ ಮನ್ನಾ (Loan Waiver) ಮಾಡಿ ಬಾಕಿ ಉಳಿಸಿದ್ದ 300 ಕೋಟಿ ಹಣವನ್ನು ಕಾಂಗ್ರೆಸ್ ಸರ್ಕಾರ ಮುಂದಿನ ದಿನದಲ್ಲಿ ತೀರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಹಕಾರ ಸಚಿವ ಕೆಎನ್ ರಾಜಣ್ಣ ಅವರ 75ನೇ ವರ್ಷದ ‘ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಹೆಸರು ಪಡೆದುಕೊಂಡರು. ಆದರೆ ಬಾಕಿಯನ್ನು ನಮ್ಮ ಸರ್ಕಾರ ತೀರಿಸಬೇಕಾಗಿದೆ. ಹೆಸರು ಅವರಿಗೆ, ಹೊರೆ ಹೊತ್ತುಕೊಂಡಿದ್ದು ನಮ್ಮ ಸರ್ಕಾರ ಎಂದರು.

2018 ರಿಂದ ಇಲ್ಲಿಯವರೆಗೂ ಕರ್ನಾಟಕದಲ್ಲಿ ಯಾರಿಗೆಲ್ಲಾ ಎಷ್ಟು ಸಾಲ ಮನ್ನಾ ಆಗಿದೆ? ಹಾಗಾದರೆ ಯಾವ ಬಾಕಿ ರೈತರ ಸಾಲಮನ್ನಾ ಆಗಲಿದೆ,ಸಾಲಮನ್ನಾ ಆಗಲು ಬೇಕಾದ ದಾಖಲೆ ಹಾಗೂ ಅರ್ಹತೆಗಳೇನು? ಹೀಗೆ ಚೆಕ್ ಮಾಡಿ-Bele sala manna status 

2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಇದ್ದಾಗ ರಾಜ್ಯದ ರೈತರ ಸಾಲಮನ್ನಾ(Bele sala manna) ಮಾಡಿದ್ದರು.ಆದರೆ ಅದರಲ್ಲಿ ಕೇಲವು ರೈತರ ದಾಖಲೆಗಳ ಕೊರತೆಯಿಂದಾಗಿ ಬಾಕಿ ಉಳಿದ ಪ್ರಕರಣಗಳಲ್ಲಿ ದಾಖಲಾತಿಗಳನ್ನು ಸಲ್ಲಿಸಿದ ನಂತರ ಸಾಲಮನ್ನಾ ಆಗುತ್ತಿದೆ.ಹಾಗಾದರೆ ಈ ಲೇಖನದಲ್ಲಿ ಯಾವೆಲ್ಲಾ ದಾಖಲಾತಿಗಳು ಬೇಕಾಗಬಹುದು ಎಂದು ಚೆಕ್ ಮಾಡಬಹುದು.

ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

ನಂತರ "Revenue department/ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು"(Revenue department services)ಮೇಲೆ ಕ್ಲಿಕ್ ಮಾಡಿ

ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ"(farmer) ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು"(Submit)ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ(Crop loan wavier) ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ(Bele sala manna list) ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ

ನಂತರ "CLWS ರೈತನ ಅರ್ಹತೆ" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್(bank) select ಮಾಡಿ,ಸಲ್ಲಿಸು/Submit ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ(crop loan wavier) ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ

]]>
Sun, 31 Aug 2025 15:44:31 +0530 shivuagrico
Job offers&2025 ನೇ ಸಾಲಿನಲ್ಲಿ ಅತಿ ಹೆಚ್ಚು ಬೇಡಿಕೆ ಇರುವ ಉದ್ಯೋಗಗಳಿವು https://krushirushi.in/Job-offers-2025 https://krushirushi.in/Job-offers-2025 Job offers-2025 ನೇ ಸಾಲಿನಲ್ಲಿ ಅತಿ ಹೆಚ್ಚು ಬೇಡಿಕೆ ಇರುವ ಉದ್ಯೋಗಗಳಿವು

ಇತ್ತೀಚೆಗೆ ನೀವು ಕೆಲಸದ ಒತ್ತಡ ಅನುಭವಿಸಿದ್ದೀರಾ? ಹಾಗಿದ್ದರೆ ನೀವು ಒಬ್ಬರೇ ಅಲ್ಲ. ಲಿಂಕ್ಡ್‌ಇನ್ ಬಿಡುಗಡೆ ಮಾಡಿದ ಇತ್ತೀಚಿನ ಕಾರ್ಮಿಕ ಮಾರುಕಟ್ಟೆ ವರದಿ ಕೂಡ ಅದೇ ಸೂಚಿಸುತ್ತದೆ. ಉದ್ಯೋಗ ಹುದ್ದೆಗಳ ಆಧಾರದ ಮೇಲೆ ನಡೆಸಿದ ವಿಶ್ಲೇಷಣೆಯಲ್ಲಿ, ಮಾನಸಿಕ ಆರೋಗ್ಯ ತಜ್ಞರ ಬೇಡಿಕೆ ಕಳೆದ ಮೂರು ತಿಂಗಳಲ್ಲಿ ಮೂರು ಪಟ್ಟು ಹೆಚ್ಚಾಗಿದೆ ಎಂಬ ಮಹತ್ವದ ಮಾಹಿತಿಯು ಬಹಿರಂಗವಾಗಿದೆ.

ಸಾಮಾಜಿಕ ಜೀವನ, ಉದ್ಯೋಗದ ಒತ್ತಡ ಮತ್ತು ವೇಗವಾಗಿ ಬದಲಾಗುತ್ತಿರುವ ಬದುಕಿನ ಶೈಲಿ ಮಾನಸಿಕ ಒತ್ತಡವನ್ನು ಹೆಚ್ಚಿಸಿದೆ. ಆದರೆ ಆಶ್ಚರ್ಯದ ಸಂಗತಿಯೇನಂದರೆ, ಈ ಹೆಚ್ಚಿದ ಬೇಡಿಕೆಯು ಸಮಾಜ ಮಾನಸಿಕ ಆರೋಗ್ಯ ಸಂಕಟವನ್ನು ಎದುರಿಸುತ್ತಿದೆ ಎಂಬುದನ್ನು ಮಾತ್ರ ಸೂಚಿಸುವುದಿಲ್ಲ. ಬದಲಿಗೆ, ಕಂಪನಿಗಳು ತಮ್ಮ ಉದ್ಯೋಗಿಗಳ ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲು ಪ್ರಾರಂಭಿಸಿವೆ ಎಂಬುದೇ ಇದರ ನಿಜವಾದ ಸಂದೇಶ.

ಹಾರ್ವರ್ಡ್ ಬಿಸಿನೆಸ್ ರಿವ್ಯೂ ಪ್ರಕಟಿಸಿದ ಸಮೀಕ್ಷೆಯ ಪ್ರಕಾರ, ಏಷ್ಯಾದಲ್ಲಿ ಕೆಲಸ ಮಾಡುವ 82% ಉದ್ಯೋಗಿಗಳು ಗಂಭೀರ ಮಾನಸಿಕ ಒತ್ತಡವನ್ನು ಅನುಭವಿಸುತ್ತಿದ್ದಾರೆ. ಇದೇ ವೇಳೆ, ಅಮೆರಿಕಾದ ಇತ್ತೀಚಿನ ವರದಿಯ ಪ್ರಕಾರ 90% ಉದ್ಯೋಗಿಗಳು ಕನಿಷ್ಠ ಒಂದು ರೀತಿಯ ಮಾನಸಿಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ಬರ್ನ್‌ಔಟ್, ಖಿನ್ನತೆ ಮತ್ತು ಆತಂಕ ಪ್ರಮುಖವಾಗಿವೆ. ಈ ಹಿನ್ನಲೆಯಲ್ಲಿ ಅನೇಕ ಸಂಸ್ಥೆಗಳು ಮನೋವೈದ್ಯರು ಮತ್ತು ಕೌನ್ಸಿಲರ್‌ಗಳ ನೇಮಕಾತಿ ಹೆಚ್ಚಿಸುತ್ತಿವೆ.

ವೇಗವಾಗಿ ಬೆಳೆಯುತ್ತಿರುವ ಬೇಡಿಕೆಯ ಉದ್ಯೋಗಗಳು (Q2 2025)

2025 ರ ಏಪ್ರಿಲ್‌ ರಿಂದ ಜೂನ್ ಅವಧಿಯಲ್ಲಿ, ಹಿಂದಿನ ತ್ರೈಮಾಸಿಕದೊಂದಿಗೆ ಹೋಲಿಸಿದಾಗ ಬೇಡಿಕೆ ಗಣನೀಯವಾಗಿ ಹೆಚ್ಚಿದ ಕೆಲವು ಹುದ್ದೆಗಳು ಹೀಗಿವೆ:

ಗಣಿತ ತಜ್ಞ - 3.3 ಪಟ್ಟು ಏರಿಕೆ
ಮಾನಸಿಕ ಆರೋಗ್ಯ ತಜ್ಞ - 3.1 ಪಟ್ಟು ಏರಿಕೆ
ಕಾರ್ಯಕ್ಷಮತೆ ವ್ಯವಸ್ಥಾಪಕ - 2.5 ಪಟ್ಟು ಏರಿಕೆ
ಗುತ್ತಿಗೆ ನಿರ್ವಾಹಕರು - 2.4 ಪಟ್ಟು ಏರಿಕೆ
ಸ್ಟಾಕ್ ಅಸೋಸಿಯೇಟ್ - 2.4 ಪಟ್ಟು ಏರಿಕೆ
ಅನುಸರಣಾ ವಿಶ್ಲೇಷಕ - 2.3 ಪಟ್ಟು ಏರಿಕೆ
ನಿರ್ವಹಣಾ ಕೆಲಸಗಾರ - 2.1 ಪಟ್ಟು ಏರಿಕೆ
ಮರ್ಚಂಡೈಸ್ ಅಸೋಸಿಯೇಟ್ - 2.0 ಪಟ್ಟು ಏರಿಕೆ
ಡೇಟಾ ಸೈನ್ಸ್ ತಜ್ಞ - 2.0 ಪಟ್ಟು ಏರಿಕೆ
ಮೀಟ್ ಕಟರ್ - 2.0 ಪಟ್ಟು ಏರಿಕೆ
ಈ ಪಟ್ಟಿಯಲ್ಲಿ ತಾಂತ್ರಿಕ, ಆರೋಗ್ಯ, ಚಿಲ್ಲರೆ ವ್ಯಾಪಾರ ಹಾಗೂ ನಿರ್ವಹಣಾ ಹುದ್ದೆಗಳ ಸಮತೋಲನಿತ ಮಿಶ್ರಣವನ್ನು ಕಾಣಬಹುದು.

ಏಕೆ ಈ ಹುದ್ದೆಗಳಿಗೆ ಹೆಚ್ಚು ಬೇಡಿಕೆ?

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ವೇಗವಾಗಿ ವ್ಯಾಪಾರಗಳನ್ನು ಮರುರೂಪಿಸುತ್ತಿರುವುದರಿಂದ ಡೇಟಾ ಸೈನ್ಸ್ ತಜ್ಞರು ಮತ್ತು ವಿಶ್ಲೇಷಕರು ಹೆಚ್ಚಿನ ಪ್ರಾಮುಖ್ಯತೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ, ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿ ಚೇತರಿಕೆ ಕಂಡುಬರುತ್ತಿರುವುದರಿಂದ ಸ್ಟಾಕ್ ಮತ್ತು ಮರ್ಚಂಡೈಸ್ ಅಸೋಸಿಯೇಟ್‌ಗಳ ಬೇಡಿಕೆ ಏರಿಕೆಯಾಗಿದೆ.

ಒಟ್ಟಾರೆ ಹೆಚ್ಚು ಬೇಡಿಕೆಯ ಹುದ್ದೆಗಳು

ಹೆಚ್ಚಾಗಿ ಹುಡುಕಲ್ಪಡುವ ಮತ್ತು ಹೂಡಿಕೆ ಮಾಡಲಾಗುತ್ತಿರುವ ಹುದ್ದೆಗಳ ಪಟ್ಟಿಯಲ್ಲಿ ದೊಡ್ಡ ಬದಲಾವಣೆಗಳಿಲ್ಲ. ಈ ಬಾರಿ ಅಗ್ರ ಸ್ಥಾನವನ್ನು ಸಾಫ್ಟ್‌ವೇರ್ ಎಂಜಿನಿಯರ್ ಕಾಯ್ದುಕೊಂಡಿದ್ದರೆ, ಅದರ ನಂತರ ಮಾರಾಟಗಾರರು ಹಾಗೂ ನರ್ಸ್‌ಗಳು ಮುಂದುವರಿದಿದ್ದಾರೆ.

Q2 2025 ರಲ್ಲಿ ಹೆಚ್ಚು ಬೇಡಿಕೆಯ ಹುದ್ದೆಗಳು:

ಸಾಫ್ಟ್‌ವೇರ್ ಎಂಜಿನಿಯರ್
ಮಾರಾಟಗಾರ
ನರ್ಸ್
ಯೋಜನಾ ವ್ಯವಸ್ಥಾಪಕ
ಗ್ರಾಹಕ ಸೇವಾ ಪ್ರತಿನಿಧಿ
ಮಾರಾಟ ವ್ಯವಸ್ಥಾಪಕ
ಲೆಕ್ಕಪರಿಶೋಧಕ
ಖಾತೆ ವ್ಯವಸ್ಥಾಪಕ
ಎಲೆಕ್ಟ್ರಿಕಲ್ ಎಂಜಿನಿಯರ್
ಡೇಟಾ ವಿಶ್ಲೇಷಕ
ಇಲ್ಲಿ ಗಮನಾರ್ಹ ಅಂಶವೆಂದರೆ, ಡೇಟಾ ವಿಶ್ಲೇಷಕರು ಮೊದಲ ಬಾರಿಗೆ ಟಾಪ್ 10 ಪಟ್ಟಿಗೆ ಪ್ರವೇಶಿಸಿದ್ದಾರೆ. ಇದು AI ಆಧಾರಿತ ಡಿಜಿಟಲ್ ರೂಪಾಂತರದ ವೇಗ ಹೆಚ್ಚುತ್ತಿರುವುದಕ್ಕೆ ಸ್ಪಷ್ಟ ಉದಾಹರಣೆ.

2025 ರ ಮಧ್ಯಭಾಗದ ಉದ್ಯೋಗ ಮಾರುಕಟ್ಟೆ ವ್ಯಾಪಕವಾಗಿದ್ದು, ಬಹುಮಟ್ಟಿಗೆ ಸ್ಥಿತಿಸ್ಥಾಪಕತೆಯನ್ನು ತೋರಿಸುತ್ತದೆ. ತಾಂತ್ರಿಕ ಹುದ್ದೆಗಳಿಂದ ಹಿಡಿದು ಆರೋಗ್ಯ ಸೇವೆಗಳು, ಚಿಲ್ಲರೆ ವ್ಯಾಪಾರದಿಂದ ಹಿಡಿದು ನಿರ್ವಹಣಾ ಕೆಲಸವರೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ಸ್ಪರ್ಧಾತ್ಮಕ ನೇಮಕಾತಿ ನಡೆಯುತ್ತಿದೆ. ಇದರ ಅರ್ಥ, ಮುಂದಿನ ತಿಂಗಳಲ್ಲಿ ಪ್ರತಿಭಾವಂತರಿಗೆ ಅವಕಾಶಗಳು ಹೆಚ್ಚಾಗುವ ಸಾಧ್ಯತೆ ಇದೆ ಮತ್ತು ಉದ್ಯೋಗದಾತರು ಉತ್ತಮ ಕೌಶಲ್ಯ ಹೊಂದಿದ ಅಭ್ಯರ್ಥಿಗಳನ್ನು ಸೆಳೆಯಲು ಹೆಚ್ಚು ಹೋರಾಟ ನಡೆಸಬೇಕಾಗುತ್ತದೆ.

]]>
Sun, 31 Aug 2025 15:05:41 +0530 shivuagrico
Hubbe male&ಇಂದಿನಿಂದ ಹುಬ್ಬೆ ಮಳೆ,ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ https://krushirushi.in/Hubbe-male-2244 https://krushirushi.in/Hubbe-male-2244 Hubbe male-ಇಂದಿನಿಂದ ಹುಬ್ಬೆ ಮಳೆ, ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯಲಿದ್ದು, ಸೆಪ್ಟೆಂಬರ್ 2ರಿಂದ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ಈ ಮಳೆಯು ಸೆಪ್ಟೆಂಬರ್ 6ರ ತನಕ ಇರಲಿದ್ದು, ನಂತರ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಸೆಪ್ಟೆಂಬರ್ 2ರಿಂದ ಮಳೆ ಸ್ವಲ್ಪ ಹೆಚ್ಚಾಗುವ ಮುನ್ಸೂಚನೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಧಾರವಾಡ ಹಾವೇರಿ, ಗದಗ, ವಿಜಯನಗರ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.


ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.


ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 4ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಥೈಲಾಂಡ್ ನಲ್ಲಿ ಈಗಾಗಲೇ ವಾಯುಭಾರ ಕುಸಿತ ಉಂಟಾಗಿದ್ದು, ಸೆಪ್ಟೆಂಬರ್ 2ರ ವೇಳೆಗೆ ಒಡಿಸ್ಸಾ ಕರಾವಳಿ ತಲಪುವ ನಿರೀಕ್ಷೆಯಿದೆ. ಇದರ ಪರಿಣಾಮದಿಂದ ರಾಜ್ಯದ ಕರಾವಳಿಯಲ್ಲಿ ಮಳೆ ಹೆಚ್ಚಾಗುವ ಸೂಚನೆಗಳಿವೆ.

Male nakshatragalu-2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು


2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-14-4-2025

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-28-4-2025

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2025

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-25-5-2025

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-6-7-2025

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-20-7-2025

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-31-8-2025

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2025

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-27-9-2025

ಉತ್ತಮ ಮಳೆ

14.ಚಿತ್ತ

ದಿನಾಂಕ-11-10-2025

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-24-10-2025

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2025

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs  ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in  website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.     

https://krushirushi.in/contact-us


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ

]]>
Sun, 31 Aug 2025 13:12:00 +0530 shivuagrico
Bele sala&37 ಲಕ್ಷ ರೈತರಿಗೆ 28 ಸಾವಿರ ಕೋಟಿ ಬೆಳೆಸಾಲ ವಿತರಣೆ,ನಿಮಗೇಷ್ಟು ಬೆಳೆಸಾಲ ವಿತರಣೆಯಾಗಿದೆ ಚೆಕ್ ಮಾಡಿ https://krushirushi.in/Bele-sala-2243 https://krushirushi.in/Bele-sala-2243 Bele sala-37 ಲಕ್ಷ ರೈತರಿಗೆ 28 ಸಾವಿರ ಕೋಟಿ ಬೆಳೆಸಾಲ ವಿತರಣೆ,ನಿಮಗೇಷ್ಟು ಬೆಳೆಸಾಲ ವಿತರಣೆಯಾಗಿದೆ ಚೆಕ್ ಮಾಡಿ


ಸಿಎಂ ಸಿದ್ದರಾಮಯ್ಯ(Siddaramaiah) ಅಧ್ಯಕ್ಷತೆಯಲ್ಲಿ ಇಂದು ಗೃಹಕಚೇರಿ ಕೃಷ್ಣಾದಲ್ಲಿ ಸಹಕಾರ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಲಾಗಿದೆ. ಕರ್ನಾಟಕದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ (farmers) ರೂ. 28 ಸಾವಿರ ಕೋಟಿ ಸಾಲ ವಿತರಣೆಯ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8,362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ.

ರೈತರಿಗೆ ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನು ಪ್ರತಿ ಜಿಲ್ಲೆಯಲ್ಲೂ ಖಾತ್ರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಹಕಾರ ಸಚಿವರಾಗಿದ್ದ ಕೆ.ಎನ್.ರಾಜಣ್ಣ ವಜಾಗೊಂಡ ನಂತರ ಮೊದಲ ಪ್ರಗತಿ ಪರಿಶೀಲನಾ ಸಭೆ ಇದಾಗಿದೆ. ರಾಜಣ್ಣ ವಜಾ ನಂತರ ಸಿಎಂ ಬಳಿಯೇ ಸಹಕಾರ ಖಾತೆ ಇದೆ. ಹೀಗಾಗಿ ಪ್ರಗತಿ ಪರಿಶೀಲನಾ ಸಭೆ ಮಾಡಿದರು.

ಸಭೆಯ ಮುಖ್ಯಾಂಶಗಳು ಹೀಗಿವೆ

ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ ರೂ.5,600 ಕೋಟಿಗಳಿಂದ ರೂ.3,236.11 ಕೋಟಿಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೇ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ.
ಅನ್ನಭಾಗ್ಯ ಅಕ್ಕಿ ಕೊಪ್ಪಳದಿಂದ ದುಬೈಗೆ ಕಳ್ಳ ಸಾಗಾಟ? 'ಟಿವಿ9' ವರದಿ ಬೆನ್ನಲ್ಲೇ ನಾಲ್ವರ ವಿರುದ್ಧ ಎಫ್​ಐಆರ್

ರಾಜ್ಯದಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ ಸಂಘಗಳು ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಇದರಲ್ಲಿ 2,200 ಹಾಲು ಉತ್ಪಾದಕ ಸಂಘಗಳು ನಷ್ಟದಲ್ಲಿವೆ. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾ ಇರಿಸಬೇಕು. ಹಾಲು ಉತ್ಪಾದನೆಯನ್ನು ಹೆಚ್ಚಿಸುವುದು ಸಂಘಗಳ ಕಾರ್ಯದರ್ಶಿಗಳ ಜವಾಬ್ದಾರಿ. ಹಾಲು ಉತ್ಪಾದಕ ಸಹಕಾರ ಸಂಘಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.


ಕನ್ನಡ ಸಾಹಿತ್ಯ ಪರಿಷತ್‌ನ ಅವ್ಯವಹಾರಗಳ ಕುರಿತು ಡಿಆರ್‌ಸಿಎಸ್ ತನಿಖೆ ನಡೆಸುತ್ತಿದೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಕೆಲವು ಸದಸ್ಯರ ಸದಸ್ಯತ್ವವನ್ನು ಪರಿಷತ್ ರದ್ದುಪಡಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಈ ಕುರಿತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸೂಚನೆ.
ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಬೇಕು.
ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.


ರಾಜ್ಯದಲ್ಲಿ 7,074 ಗಿರವಿದಾರ ಸಂಸ್ಥೆಗಳು ಹಾಗೂ 1,468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಸಂಸ್ಥೆಗಳು ಹಾಗೂ ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು.

ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಹಕಾರ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸೂಚಿಸಿದ್ದಾರೆ.

Sala manna-ರೈತರ ಸಾಲಮನ್ನಾದ 300 ಕೋಟಿ ಬಾಕಿ ತಿರಿಸುತ್ತೇವೆ-ಸಿಎಂ ಸಿದ್ದರಾಮಯ್ಯ

ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ರೈತರ ಸಾಲ ಮನ್ನಾ (Loan Waiver) ಮಾಡಿ ಬಾಕಿ ಉಳಿಸಿದ್ದ 300 ಕೋಟಿ ಹಣವನ್ನು ಕಾಂಗ್ರೆಸ್ ಸರ್ಕಾರ ಮುಂದಿನ ದಿನದಲ್ಲಿ ತೀರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಹಕಾರ ಸಚಿವ ಕೆಎನ್ ರಾಜಣ್ಣ ಅವರ 75ನೇ ವರ್ಷದ ‘ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಹೆಸರು ಪಡೆದುಕೊಂಡರು. ಆದರೆ ಬಾಕಿಯನ್ನು ನಮ್ಮ ಸರ್ಕಾರ ತೀರಿಸಬೇಕಾಗಿದೆ. ಹೆಸರು ಅವರಿಗೆ, ಹೊರೆ ಹೊತ್ತುಕೊಂಡಿದ್ದು ನಮ್ಮ ಸರ್ಕಾರ ಎಂದರು.

2018 ರಿಂದ ಇಲ್ಲಿಯವರೆಗೂ ಕರ್ನಾಟಕದಲ್ಲಿ ಯಾರಿಗೆಲ್ಲಾ ಎಷ್ಟು ಸಾಲ ಮನ್ನಾ ಆಗಿದೆ? ಹಾಗಾದರೆ ಯಾವ ಬಾಕಿ ರೈತರ ಸಾಲಮನ್ನಾ ಆಗಲಿದೆ,ಸಾಲಮನ್ನಾ ಆಗಲು ಬೇಕಾದ ದಾಖಲೆ ಹಾಗೂ ಅರ್ಹತೆಗಳೇನು? ಹೀಗೆ ಚೆಕ್ ಮಾಡಿ-Bele sala manna status 

2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಇದ್ದಾಗ ರಾಜ್ಯದ ರೈತರ ಸಾಲಮನ್ನಾ(Bele sala manna) ಮಾಡಿದ್ದರು.ಆದರೆ ಅದರಲ್ಲಿ ಕೇಲವು ರೈತರ ದಾಖಲೆಗಳ ಕೊರತೆಯಿಂದಾಗಿ ಬಾಕಿ ಉಳಿದ ಪ್ರಕರಣಗಳಲ್ಲಿ ದಾಖಲಾತಿಗಳನ್ನು ಸಲ್ಲಿಸಿದ ನಂತರ ಸಾಲಮನ್ನಾ ಆಗುತ್ತಿದೆ.ಹಾಗಾದರೆ ಈ ಲೇಖನದಲ್ಲಿ ಯಾವೆಲ್ಲಾ ದಾಖಲಾತಿಗಳು ಬೇಕಾಗಬಹುದು ಎಂದು ಚೆಕ್ ಮಾಡಬಹುದು.

ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

ನಂತರ "Revenue department/ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು"(Revenue department services)ಮೇಲೆ ಕ್ಲಿಕ್ ಮಾಡಿ

ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ"(farmer) ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು"(Submit)ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ(Crop loan wavier) ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ(Bele sala manna list) ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ

ನಂತರ "CLWS ರೈತನ ಅರ್ಹತೆ" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್(bank) select ಮಾಡಿ,ಸಲ್ಲಿಸು/Submit ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ(crop loan wavier) ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ

]]>
Fri, 29 Aug 2025 13:15:53 +0530 shivuagrico
Dairy farming&50% ಸಬ್ಸಿಡಿಯಲ್ಲಿ 2 ಹಸು,ಎಮ್ಮೆ ಖರೀದಿಸಲು 1.25 ಲಕ್ಷ ಸಹಾಯಧನ https://krushirushi.in/Dairy-farming-2242 https://krushirushi.in/Dairy-farming-2242 Dairy farming-50% ಸಬ್ಸಿಡಿಯಲ್ಲಿ 2 ಹಸು,ಎಮ್ಮೆ ಖರೀದಿಸಲು 1.25 ಲಕ್ಷ ಸಹಾಯಧನ


ಏನಿದು ಹೈನುಗಾರಿಕೆ ಯೋಜನೆ?

ಕರ್ನಾಟಕ ಹೈನುಗಾರಿಕೆ ಯೋಜನೆ , ಪಶು ಭಾಗ್ಯ ಯೋಜನೆ ಎಂದೂ ಕರೆಯಲ್ಪಡುತ್ತದೆ. ಇದು ರಾಜ್ಯ ಪ್ರಾಯೋಜಿತ ಉಪಕ್ರಮವಾಗಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಇದು ಕರ್ನಾಟಕದಲ್ಲಿ ಹೈನುಗಾರರನ್ನು ಬೆಂಬಲಿಸುವ ಮತ್ತು ಹೈನುಗಾರಿಕೆ ವಲಯವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಇದು ಡೈರಿ ಘಟಕಗಳನ್ನು ಸ್ಥಾಪಿಸಲು, ಪ್ರಾಣಿಗಳನ್ನು ಖರೀದಿಸಲು ಮತ್ತು ಸಾಲಗಳನ್ನು ಪಡೆಯಲು ಸಹಾಯಧನಗಳನ್ನು ಒಳಗೊಂಡಂತೆ ಡೈರಿ ರೈತರಿಗೆ ಹಣಕಾಸಿನ ನೆರವು, ತರಬೇತಿ ಮತ್ತು ಮಾರುಕಟ್ಟೆ ಬೆಂಬಲವನ್ನು ಒದಗಿಸುತ್ತದೆ. ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ಹೈನುಗಾರಿಕೆಯ ಘಟಕಗಳನ್ನು ಸ್ಥಾಪಿಸಲು ಮತ್ತು ಅಭಿವೃದ್ಧಿಪಡಿಸಲು 1.25 ಲಕ್ಷ ರೂ.ಗಳ ಸಹಾಯಧನವನ್ನು ನೀಡಲಾಗುತ್ತದೆ, ಇದು ಸ್ಥಿರ ಜೀವನೋಪಾಯ ಮತ್ತು ಹಾಲು ಉತ್ಪಾದನೆಗೆ ನೆರವಾಗುತ್ತದೆ

ಯೋಜನೆಯ ಪ್ರಮುಖ ಅಂಶಗಳು

ಈ ಯೋಜನೆಯ ಮುಖ್ಯ ಉದ್ದೇಶವು ಗ್ರಾಮೀಣ ಪ್ರದೇಶದ ರೈತರಿಗೆ ಸ್ಥಿರ ಆದಾಯದ ಮೂಲವನ್ನು ಒದಗಿಸುವುದು ಮತ್ತು ಹೈನುಗಾರಿಕೆ ಕ್ಷೇತ್ರವನ್ನು ಬಲಪಡಿಸುವುದು. ಯೋಜನೆ ಅಡಿಯಲ್ಲಿ ಸಿಗುವ ಪ್ರಮುಖ ಪ್ರಯೋಜನಗಳೆಂದರೆ…

  • ಆರ್ಥಿಕ ನೆರವು: ಡೈರಿ ಘಟಕಗಳನ್ನು ಸ್ಥಾಪಿಸಲು, ಹಾಲು ನೀಡುವ ಪ್ರಾಣಿಗಳನ್ನು (ಹಸು, ಎಮ್ಮೆ) ಖರೀದಿಸಲು, ಮತ್ತು ಮೇವು ಅಭಿವೃದ್ಧಿಪಡಿಸಲು ಆರ್ಥಿಕ ಸಹಾಯಧನ ದೊರೆಯುತ್ತದೆ.
  • ತರಬೇತಿ ಮತ್ತು ಬೆಂಬಲ: ಪ್ರಾಣಿಗಳ ನಿರ್ವಹಣೆ, ಆಹಾರ ಪದ್ಧತಿ, ಮತ್ತು ರೋಗ ನಿಯಂತ್ರಣದ ಬಗ್ಗೆ ರೈತರಿಗೆ ತರಬೇತಿ ನೀಡಲಾಗುತ್ತದೆ.
  • ಸಾಲ ಮತ್ತು ವಿಮಾ ರಕ್ಷಣೆ: ಪ್ರಾಣಿಗಳನ್ನು ಖರೀದಿಸಲು ತೆಗೆದುಕೊಂಡ ಸಾಲಗಳ ಮೇಲೆ ಬಡ್ಡಿ ಸಬ್ಸಿಡಿ ಮತ್ತು ಜಾನುವಾರುಗಳಿಗೆ ವಿಮಾ ರಕ್ಷಣೆಯೂ ದೊರೆಯುತ್ತದೆ.
  • ಮಾರುಕಟ್ಟೆ ಬೆಂಬಲ: ಸಹಕಾರಿ ಸಂಘಗಳ ಮೂಲಕ ಹಾಲು ಉತ್ಪಾದಕರಿಗೆ ಉತ್ತಮ ಬೆಲೆ ಮತ್ತು ಮಾರುಕಟ್ಟೆ ಪ್ರವೇಶಕ್ಕೆ ಸಹಾಯ ದೊರೆಯುತ್ತದೆ.

 

ಯೋಜನೆಯಡಿ ದೊರೆಯುವ ಆರ್ಥಿಕ ನೆರವು ಎಷ್ಟು?

ಯೋಜನೆ ಅಡಿಯಲ್ಲಿ, ಅರ್ಹ ಫಲಾನುಭವಿಗಳಿಗೆ ಎರಡು ಹಸು ಅಥವಾ ಎಮ್ಮೆಗಳನ್ನು ಖರೀದಿಸಲು ಗರಿಷ್ಠ 1.25 ಲಕ್ಷ ರೂ. ಅಥವಾ ಶೇ. 50% ಸಬ್ಸಿಡಿ ನೀಡಲಾಗುತ್ತದೆ.

ಪ್ರಮುಖ ಅರ್ಹತಾ ಮಾನದಂಡಗಳೇನು?

  • ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳ ವರ್ಗಗಳಿಗೆ ಸೇರಿದವರಾಗಿರಬೇಕು.
  • ಈ ಹಿಂದೆ ಇದೇ ಯೋಜನೆಯಡಿ ಸಬ್ಸಿಡಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರಲ್ಲ.
  • ಸರ್ಕಾರಿ ಅಥವಾ ಅರೆ ಸರ್ಕಾರಿ ನೌಕರಿಯಲ್ಲಿರುವ ಕುಟುಂಬದ ಸದಸ್ಯರು ಅರ್ಜಿ ಸಲ್ಲಿಸುವಂತಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಂದು?

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಎರಡು ಎಮ್ಮೆ ಅಥವಾ ಹಸುವನ್ನು ಖರೀದಿ ಮಾಡಲು ಸಹಾಯಹಧನವನ್ನು ಒದಗಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 10, 2025 ಆಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು:

  • ಆನ್‌ಲೈನ್ ಮೂಲಕ: ನೀವು ಸ್ವತಃ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
  • ಕೇಂದ್ರಗಳ ಮೂಲಕ: ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಸಹಾಯ ಪಡೆಯಬಹುದು.



ಆನ್‌ಲೈನ್ ಅರ್ಜಿ ಸಲ್ಲಿಸುವ ಹಂತಗಳು:

  • ಅಧಿಕೃತ ವೆಬ್‌ಸೈಟ್‌ https://swdcorp.karnataka.gov.in/ADCLPortal/schemedetail/DFS ಗೆ ಭೇಟಿ ನೀಡಿ.
  • ವೆಬ್‌ಸೈಟ್‌ನಲ್ಲಿ "ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ಮೊಬೈಲ್ ನಂಬರ್ ಮತ್ತು ಒಟಿಪಿ ಬಳಸಿ ಲಾಗಿನ್ ಆಗಿ.
  • ಅರ್ಜಿ ನಮೂನೆಯಲ್ಲಿ ಕೇಳಿದ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಕೊನೆಯಲ್ಲಿ "ಸಲ್ಲಿಸಿ" (Submit) ಬಟನ್ ಮೇಲೆ ಕ್ಲಿಕ್ ಮಾಡಿ.

ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್
  • ಪಾಸ್‌ಪೋರ್ಟ್ ಗಾತ್ರದ ಫೋಟೋ
  • ಬ್ಯಾಂಕ್ ಪಾಸ್ ಬುಕ್
  • ಜಾತಿ ಮತ್ತು ಆದಾಯ ಪ್ರಮಾಣಪತ್ರ
  • ರೇಷನ್ ಕಾರ್ಡ್
  • ಮೊಬೈಲ್ ನಂಬರ್

ಸಹಾಯವಾಣಿ

ಯಾವುದೇ ಹೆಚ್ಚಿನ ಮಾಹಿತಿ ಬೇಕಿದ್ದರೆ, ನೀವು ಸಹಾಯವಾಣಿ ಸಂಖ್ಯೆ 9482300400 ಅನ್ನು ಸಂಪರ್ಕಿಸಬಹುದು.

]]>
Thu, 21 Aug 2025 07:08:17 +0530 shivuagrico
Magha male&ಇಂದು ಈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ https://krushirushi.in/Magha-male-2241 https://krushirushi.in/Magha-male-2241 Magha male-ಭಾರಿ ಮಳೆಗೆ ಉತ್ತರ ಕರ್ನಾಟಕದ ಈ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

3 ರ್ನಾಟಕದಲ್ಲಿ ಇಂದು ಮಳೆ ಅಬ್ಬರ ಮುಂದುವರಿಯಲಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಧಾರವಾಡ, ಹಾವೇರಿ, ಉತ್ತರ ಕನ್ನಡ, ಬೆಳಗಾವಿ, ಯಾದಗಿರಿ, ಬೀದ‌ರ್, ಬಾಗಲಕೋಟೆ ಜಿಲ್ಲೆಗಳಲ್ಲಿ ಶಾಲೆ ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ.


ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಎರಡು ದಿನ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ.


ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ, ಬಿಸಿಲು ಹಾಗೂ ಬಿಟ್ಟು ಬಿಟ್ಟು ದಿನದಲ್ಲಿ ಸಣ್ಣ ಪ್ರಮಾಣದ 3, 4 ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 


ಈಗಿನಂತೆ ಆಗಸ್ಟ್ 21ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. 


ಈಗಿನಂತೆ ಆಗಸ್ಟ್ 21ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 
ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಆಗಸ್ಟ್ 20ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ. 

ಒಡಿಸ್ಸಾದಲ್ಲಿರುವುದು ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ಗುಜರಾತ್ ಗೆ ತಲಪುವ ನಿರೀಕ್ಷೆಯಿದೆ.
ಈ ಮಧ್ಯೆ ಕಳೆದ ಎರಡು ದಿನಗಳಿಂದ ಅರಬ್ಬಿ ಸಮುದ್ರದ ಗುಜರಾತ್, ಮಹಾರಾಷ್ಟ್ರ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗಿದ್ದು, ಆಗಸ್ಟ್ 20ರಂದು ಅದೂ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಇದರಿಂದ ಮಹಾರಾಷ್ಟ್ರ ಹಾಗೂ ಕರ್ನಾಟಕ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಲಿದೆ.

Male nakshatragalu-2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು


2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-14-4-2025

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-28-4-2025

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2025

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-25-5-2025

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-6-7-2025

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-20-7-2025

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-31-8-2025

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2025

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-27-9-2025

ಉತ್ತಮ ಮಳೆ

14.ಚಿತ್ತ

ದಿನಾಂಕ-11-10-2025

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-24-10-2025

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2025

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs  ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in  website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.     

https://krushirushi.in/contact-us


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ

]]>
Fri, 15 Aug 2025 18:17:21 +0530 shivuagrico
LPG cylinder subsidy&ವರ್ಷಕ್ಕೆ 9 ಸಿಲಿಂಡರ್ ಮರುಪೂರಣಕ್ಕೆ ಸಿಗಲಿದೆ 300 ರೂಪಾಯಿ ಸಬ್ಸಿಡಿ,ಇಲ್ಲಿಯವರೆಗೂ ನಿಮಗೇಷ್ಟು ಸಬ್ಸಿಡಿ ಜಮಾ ಆಗಿದೆ ಚೆಕ್ ಮಾಡಿ https://krushirushi.in/LPG-cylinder-subsidy-2240 https://krushirushi.in/LPG-cylinder-subsidy-2240 LPG cylinder subsidy-ವರ್ಷಕ್ಕೆ 9 ಸಿಲಿಂಡರ್ ಮರುಪೂರಣಕ್ಕೆ ಸಿಗಲಿದೆ 300 ರೂಪಾಯಿ ಸಬ್ಸಿಡಿ,ಇಲ್ಲಿಯವರೆಗೂ ನಿಮಗೇಷ್ಟು ಸಬ್ಸಿಡಿ ಜಮಾ ಆಗಿದೆ ಚೆಕ್ ಮಾಡಿ

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಗ್ರಾಹಕರಿಗೆ ಲಭ್ಯವಾಗುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಮುಂದುವಿರಿಸುತ್ತಿದೆ. 12 ಸಾವಿರ ಕೋಟಿ ರೂಪಾಯಿಗಳ ಅಂದಾಜು ವೆಚ್ಚದೊಂದಿಗೆ ವರ್ಷದ ಉದ್ದೇಶಿತ ಸಬ್ಸಿಡಿಗಳನ್ನು ಮುಂದುವರಿಸಲು ಸರ್ಕಾರ ಅನುಮೋದನೆ ನೀಡಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ 2025-26ರ ಹಣಕಾಸು ವರ್ಷದಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ (PMUY)ಯ ಫಲಾನುಭವಿಗಳಿಗೆ 14.2 ಕೆಜಿ ಸಿಲಿಂಡರ್‌ಗೆ ವರ್ಷಕ್ಕೆ 9 ಪುನರ್ ಭರ್ತಿಗೊಳಿಸುವಿಕೆ (ಮತ್ತು 5 ಕೆಜಿ ಸಿಲಿಂಡರ್‌ಗೆ ಅನುಗುಣವಾದ ಅನುಪಾತದಲ್ಲಿ) 300 ರೂ. ಉದ್ದೇಶಿತ ಸಬ್ಸಿಡಿ ನೀಡುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ, ಇದಕ್ಕಾಗಿ ರೂ. 12,000 ಕೋಟಿ ವೆಚ್ಚ ಮಾಡಲಿದೆ. ಯೋಜನೆಯಡಿ 10 ಕೋಟಿ 33 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಪ್ರಯೋಜನ ಪಡೆಯುತ್ತಿದ್ದು, ಸಬ್ಸಡಿಯ ಪ್ರಯೋಜನ ಲಭ್ಯವಾಗಲಿದೆ.

ಏನಿದು ಪ್ರಧಾನಮಂತ್ರಿ ಉಜ್ವಲ ಯೋಜನೆ?

ದೇಶಾದ್ಯಂತ ಬಡ ಕುಟುಂಬಗಳ ವಯಸ್ಕ ಮಹಿಳೆಯರಿಗೆ ಠೇವಣಿ-ಮುಕ್ತ ಎಲ್‌ಪಿಜಿ ಸಂಪರ್ಕ ಒದಗಿಸುವ ಉದ್ದೇಶದಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಯನ್ನು 2016 ಮೇ ನಲ್ಲಿ ಆರಂಭಿಸಲಾಯಿತು. 2025ರ ಜುಲೈವರೆಗಿನ ಮಾಹಿತಿಯಂತೆ, ದೇಶಾದ್ಯಂತ ಸುಮಾರು 10.33 ಕೋಟಿ ಪಿಎಂಯುವೈ ಅನಿಲ ಸಂಪರ್ಕಗಳಿವೆ.

ಎಲ್ಲಾ PMUY ಫಲಾನುಭವಿಗಳು ಠೇವಣಿ-ಮುಕ್ತ ಎಲ್‌ಪಿಜಿ ಸಂಪರ್ಕ ಪಡೆಯುತ್ತಾರೆ. ಇದರಲ್ಲಿ ಸಿಲಿಂಡರ್‌ನ ಭದ್ರತಾ ಠೇವಣಿ(ಎಸ್‌ಡಿ), ಒತ್ತಡ ನಿಯಂತ್ರಕ, ಸುರಕ್ಷಾ ಮೆದುಗೊಳವೆ. ದೇಶೀಯ ಅನಿಲ ಗ್ರಾಹಕ ಕಾರ್ಡ್ (ಡಿಜಿಸಿಸಿ) ಕಿರುಪುಸ್ತಕ ಮತ್ತು ಅನುಸ್ಥಾಪನಾ ಶುಲ್ಕಗಳು ಸೇರಿವೆ. ಉಜ್ವಲ 2.0ರ ಅಸ್ತಿತ್ವದಲ್ಲಿರುವ ವಿಧಾನಗಳ ಪ್ರಕಾರ, ಮೊದಲ ಮರುಪೂರಣ ಮತ್ತು ಸ್ಟೌವ್ ಅನ್ನು ಎಲ್ಲಾ ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗುತ್ತದೆ. ಪಿಎಂಯುವೈ ಫಲಾನುಭವಿಗಳು ಎಲ್‌ಪಿಜಿ ಸಂಪರ್ಕ ಅಥವಾ ಮೊದಲ ಮರುಪೂರಣ ಅಥವಾ ಸ್ಟೌವ್‌ಗೆ ಯಾವುದೇ ಪಾವತಿ ಮಾಡುವ ಅಗತ್ಯವಿಲ್ಲ, ಏಕೆಂದರೆ ಇವುಗಳ ವೆಚ್ಚವನ್ನು ಭಾರತ ಸರ್ಕಾರ/ತೈಲ ಮಾರುಕಟ್ಟೆ ಕಂಪನಿ(ಒಎಂಸಿ)ಗಳು ಭರಿಸುತ್ತವೆ.

ಉಜ್ವಲ ಯೋಜನೆಯ ಗ್ರಾಹಕರಿಗೆ ಉದ್ದೇಶಿತ ಸಬ್ಸಿಡಿ

ಭಾರತವು ತನ್ನ ಎಲ್‌ಪಿಜಿ ಅಗತ್ಯದ ಸುಮಾರು 60% ಪ್ರಮಾಣವನ್ನು ಆಮದು ಮಾಡಿಕೊಳ್ಳುತ್ತದೆ. ಉಜ್ವಲ ಯೋಜನೆಯ ಫಲಾನುಭವಿಗಳನ್ನು ಎಲ್‌ಪಿಜಿಯ ಅಂತಾರಾಷ್ಟ್ರೀಯ ಬೆಲೆಗಳಲ್ಲಿನ ತೀವ್ರ ಏರಿಳಿತಗಳ ಪರಿಣಾಮದಿಂದ ರಕ್ಷಿಸಲು ಮತ್ತು ಪಿಎಂಯುವೈ ಬಳಕೆದಾರರಿಗೆ ಎಲ್‌ಪಿಜಿಯನ್ನು ಹೆಚ್ಚು ಅನುಕೂಲಕರವಾಗಿಸುತ್ತಿದೆ. ಆ ಮೂಲಕ ಅವರಿಂದ ಎಲ್‌ಪಿಜಿಯ ನಿರಂತರ ಬಳಕೆಯನ್ನು ಖಚಿತಪಡಿಸಿಕೊಳ್ಳಲು, ಸರ್ಕಾರವು 2022 ಮೇನಲ್ಲಿ ಪಿಎಂಯುವೈ ಗ್ರಾಹಕರಿಗೆ ವಾರ್ಷಿಕ 12 ಮರುಪೂರಣಗಳಿಗೆ (ಮತ್ತು 5 ಕೆಜಿ ಸಂಪರ್ಕಗಳಿಗೆ ಪ್ರಮಾಣಕ್ಕೆ ಅನುಗುಣವಾದ ಅನುಪಾತದಲ್ಲಿ) 14.2 ಕೆಜಿ ಸಿಲಿಂಡರ್‌ಗೆ 200 ರೂ. ಉದ್ದೇಶಿತ ಸಬ್ಸಿಡಿ ಆರಂಭಿಸಿತು. 2023 ಅಕ್ಟೋಬರ್ ನಲ್ಲಿ ಸರ್ಕಾರವು ವಾರ್ಷಿಕ 12 ಮರುಪೂರಣಗಳಿಗೆ (ಮತ್ತು 5 ಕೆಜಿ ಸಂಪರ್ಕಗಳಿಗೆ ಪ್ರಮಾಣಕ್ಕೆ ಅನುಗುಣವಾದ ಅನುಪಾತದಲ್ಲಿ) 14.2 ಕೆಜಿ ಸಿಲಿಂಡರ್‌ಗೆ 300 ರೂ.ಗೆ ಉದ್ದೇಶಿತ ಸಬ್ಸಿಡಿಯನ್ನು ಹೆಚ್ಚಿಸಿತು.

ಎಲ್‌ಪಿಜಿ ಸಬ್ಸಿಡಿ ವಿತರಣೆ ಹೇಗೆ?

ಉಜ್ವಲ ಸಬ್ಸಿಡಿಯನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಪ್ರಸ್ತುತ, ಈ ಯೋಜನೆಯು ವರ್ಷಕ್ಕೆ 9 ಮರುಪೂರಣಗಳಿಗೆ 14.2 ಕೆಜಿ ಸಿಲಿಂಡರ್‌ಗೆ 300 ರೂ.ಗಳ ಗುರಿ ಸಬ್ಸಿಡಿಯನ್ನು ಒದಗಿಸುತ್ತದೆ.

ಎಲ್‌ಪಿಜಿ ಸಂಪರ್ಕ ಪಡೆಯಲು ಅರ್ಹತಾ ಮಾನದಂಡಗಳು

  • ಅರ್ಜಿದಾರರು (ಮಹಿಳೆಯರು ಮಾತ್ರ) 18 ವರ್ಷ ವಯಸ್ಸಿನವರಾಗಿರಬೇಕು.
  • ಒಂದೇ ಮನೆಯಲ್ಲಿ ಬೇರೆ ಯಾವುದೇ LPG ಸಂಪರ್ಕ ಹೊಂದಿರಬಾರದು.
  • ಈ ಕೆಳಗಿನ ಯಾವುದೇ ವರ್ಗಗಳಿಗೆ ಸೇರಿದ ವಯಸ್ಕ ಮಹಿಳೆ - SC, ST, ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ), ಅತ್ಯಂತ ಹಿಂದುಳಿದ ವರ್ಗಗಳು, ಅಂತ್ಯೋದಯ ಅನ್ನ ಯೋಜನೆ (AAY), ಚಹಾ ಮತ್ತು ಮಾಜಿ-ಟೀ ತೋಟದ ಬುಡಕಟ್ಟು ಜನಾಂಗದವರು, ಅರಣ್ಯವಾಸಿಗಳು, ದ್ವೀಪಗಳು ಮತ್ತು ನದಿ ದ್ವೀಪಗಳಲ್ಲಿ ವಾಸಿಸುವ ಜನರು, SECC ಕುಟುಂಬಗಳು (AHL TIN) ಅಡಿಯಲ್ಲಿ ದಾಖಲಾಗಿರುವವರು ಅಥವಾ 14-ಪಾಯಿಂಟ್ ಘೋಷಣೆಯ ಪ್ರಕಾರ ಯಾವುದೇ ಬಡ ಕುಟುಂಬ.

Gas subsidy-ನಿಮ್ಮ ಗ್ಯಾಸ್ ಸಬ್ಸಿಡಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://www.mylpg.in/

ನಂತರ ನೀವು ಬಳಸುವ ಗ್ಯಾಸ್ ಕಂಪನಿಯ ಸಿಲಿಂಡರ್ ಮೇಲೆ ಕ್ಲಿಕ್ ಮಾಡಿ

ನಂತರ ನೀವು ಮೊದಲ ಬಾರಿ login ಆಗತ್ತಿದ್ದರೆ, New user ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ,ಜಿಲ್ಲೆ,ಗ್ಯಾಸ್ ಏಜನ್ಸಿ select ಮಾಡಿ,ನಿಮ್ಮ consumer number,ಮೊಬೈಲ್ ನಂಬರ್ ಹಾಗೂ Captch type ಮಾಡಿ,proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಗೆ ಬರುವ OTP ಹಾಕಿ, submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಇ-ಮೇಲ್ ಐಡಿ ಹಾಕಿ,ಹೊಸ Password create ಮಾಡಿ,confirm password type ಮಾಡಿ

ನಂತರ ನಿಮ್ಮ ಇಮೇಲ್ ಐಡಿಗೆ ಬರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ Account activate ಆಗುತ್ತದೆ.click here to login ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ signin ಮೇಲೆ ಕ್ಲಿಕ್ ಮಾಡಿ ಮೊಬೈಲ್ ನಂಬರ್ ಅಥವಾ email Id ಹಾಕಿ, captcha type ಮಾಡಿ,Login ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಇಮೇಲ್ ಐಡಿ ಹಾಕಿ, create ಮಾಡಿದ password ಹಾಕಿ login ಮಾಡಿ

ನಂತರ login ಆದ ನಂತರ ಮುಖಪುಟದ ಎಡಭಾಗದಲ್ಲಿರುವ view cylinder booking history/subsidy transfered ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ಗ್ಯಾಸ್ ಸಬ್ಸಿಡಿ ಮಾಹಿತಿ ದೊರೆಯುತ್ತದೆ.

]]>
Tue, 12 Aug 2025 07:02:46 +0530 shivuagrico
Bele vime&ಇಂದು ಕೇಂದ್ರ ಸರ್ಕಾರದಿಂದ 30 ಲಕ್ಷ ರೈತರ ಖಾತೆಗೆ 3200 ಕೋಟಿ ಬೆಳೆವಿಮೆ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Bele-vime-2239 https://krushirushi.in/Bele-vime-2239 Bele vime-ಇಂದು ಕೇಂದ್ರ ಸರ್ಕಾರದಿಂದ 30 ಲಕ್ಷ ರೈತರ ಖಾತೆಗೆ 3200 ಕೋಟಿ ಬೆಳೆವಿಮೆ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 30 ಲಕ್ಷ ರೈತ ಫಲಾನುಭವಿಗಳ ಖಾತೆಗಳಿಗೆ 3200 ಕೋಟಿ ರೂಪಾಯಿಗಳನ್ನು ವರ್ಗಾಯಿಸಲಿದ್ದಾರೆ.
 
ಬಿಡುಗಡೆಯ ಪ್ರಕಾರ, 2025 ರ ಖಾರಿಫ್ ಋತುವಿನಿಂದ, ರಾಜ್ಯ ಸರ್ಕಾರಗಳು ಸಬ್ಸಿಡಿ ಕೊಡುಗೆ ವಿಳಂಬಕ್ಕೆ ಶೇಕಡಾ 12 ರಷ್ಟು ದಂಡ ವಿಧಿಸಲಾಗುವುದು ಮತ್ತು ಅದೇ ರೀತಿ, ವಿಮಾ ಕಂಪನಿಗಳು ಪಾವತಿ ವಿಳಂಬಕ್ಕೆ, ಕಂಪನಿಗಳು ರೈತರಿಗೆ ಶೇಕಡಾ 12 ರಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ನಿರ್ಧರಿಸಲಾಗಿದೆ.

2024-25ನೇ ಸಾಲಿನ ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಹಾನಿಗೆ ಬೆಳೆ ವಿಮೆ ಮಂಜೂರಾಗಿದ್ದು, ರಾಜ್ಯಕ್ಕೆ 1,449 ಕೋಟಿ ರೂ. ಬಿಡುಗಡೆಯಾಗಿದೆ. ಕಲಬುರಗಿ ಹಾಗೂ ಗದಗ ಜಿಲ್ಲೆಗೆ ಬಂಪ‌ರ್ ಪರಿಹಾರ ದೊರಕಿದೆ.


ಕಳೆದ ಸಾಲಿನ ಮುಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಯಡಿ ಮುಂಗಾರು ಹಂಗಾಮಿನ ಬೆಳೆಗಳಾದ ತೊಗರಿ, ಭತ್ತ, ರಾಗಿ, ಮೆಕ್ಕೆಜೋಳ, ಸೋಯಾಬಿನ್, ಹತ್ತಿ, ಹೆಸರು, ನೆಲಗಡಲೆ ಮುಂತಾದ ಬೆಳೆಗಳಿಗೆ ಬೆಳೆವಿಮೆ ಮಂಜೂರಾಗಿದೆ.
ಇದರಲ್ಲಿ ಶೇ. ಅರ್ಧಕ್ಕಿಂತ ಹೆಚ್ಚಿನ ಹಣ ಈಗಾಗಲೇ ರೈತರ ಖಾತೆಗಳಿಗೆ ಜಮೆ ಆಗಿದೆ. ಕಳೆದ ಹಲವಾರು ವರ್ಷಗಳಿಂದ 1,400ರಿಂದ 1,600 ಕೋಟಿ ರೂ. ಅಂದಾಜಿನಲ್ಲಿ ರಾಜ್ಯಕ್ಕೆ ಬೆಳೆವಿಮೆ ಬಿಡುಗಡೆಯಾಗುತ್ತಿದೆ. ಅದೇ ರೀತಿ 2024-25ನೇ ಸಾಲಿನ ಮಂಜೂರಾತಿ ಆಗಿರುವ ಒಟ್ಟಾರೆ ಬೆಳೆ ವಿಮೆ ಪರಿಹಾರದಲ್ಲಿ ಸಿಂಹಪಾಲು ಕಲಬುರಗಿ ಹಾಗೂ ಗದಗ ಜಿಲ್ಲೆ ಪಡೆದಿರುವುದು ಗಮನಾರ್ಹ ಸಂಗತಿಯಾಗಿದೆ.

ಕಲಬುರಗಿಗೆ 3 ಪಟ್ಟು ಹೆಚ್ಚಳ
ಕಲಬುರಗಿ ಜಿಲ್ಲೆಗೆ 656 ಕೋಟಿ ರೂ., ಗದಗ ಜಿಲ್ಲೆಗೆ 242 ಕೋ.ರೂ., ಹಾವೇರಿಗೆ 95 ಕೋ. ರೂ., ವಿಜಯಪುರಕ್ಕೆ 97 ಕೋ. ರೂ., ಧಾರವಾಡಕ್ಕೆ 23 ಕೋ. ರೂ. ಬೆಳೆ ವಿಮೆ ಪರಿಹಾರ ಮಂಜೂರಾಗಿದೆ. ಗಮನಾರ್ಹ ಸಂಗತಿ ಎಂದರೆ 2023-24ನೇ ಸಾಲಿನಲ್ಲಿ ಕಲಬುರಗಿಗೆ 189 ಕೋ. ರೂ. ಹಾಗೂ ಹಾವೇರಿಗೆ 400 ಕೋ. ರೂ. ಬೆಳೆವಿಮೆ ಬಿಡುಗಡೆಯಾಗಿತ್ತು. ಗದಗ ಹಾಗೂ ಹಾವೇರಿ ಜಿಲ್ಲೆಗೆ ಸತತವಾಗಿ ಕಳೆದ ಒಂದೂವರೆ ದಶಕದಿಂದ 100 ಕೋಟಿ ರೂ.ಗೂ ಅಧಿಕ ಬೆಳೆವಿಮೆ ಬಿಡುಗಡೆಯಾಗುತ್ತಲೇ ಬರುತ್ತಿದೆ.


ಕಳೆದ ಮಾರ್ಚ್‌ನಲ್ಲೇ ಮುಂಗಾರು ಹಂಗಾಮಿನ ತೊಗರಿ, ಹೆಸರು, ಉದ್ದು, ಸೂರ್ಯಕಾಂತಿ ಸೇರಿ ಇತರ ಬೆಳೆಗಳಿಗೆ ಬೆಳೆ ವಿಮೆ ಪರಿಹಾರ ಮಂಜೂರಾಗಿದ್ದು, ಅಕಾಲಿಕ ಹಾಗೂ ಕೊರತೆ ಮಳೆಯಿಂದ ಹಾನಿಗೀಡಾದ ರೈತರಿಗೆ ಈ ಬೆಳೆ ಪರಿಹಾರ ನಿಜಕ್ಕೂ ಆಸರೆಯಾಗುವಂತೆ ಮಾಡಿದೆ. ರಾಜ್ಯದಲ್ಲಿ 1,449 ಕೋಟಿ ರೂ. ಬೆಳೆವಿಮೆ ಪರಿಹಾರ 23 ಲಕ್ಷ ರೈತರಿಗೆ ದೊರಕಲಿದೆ.

ಯಾವ ಜಿಲ್ಲೆಗೆ ಎಷ್ಟು ಪರಿಹಾರ?
ಬೆಂಗಳೂರು ಗ್ರಾಮಾಂತರ 79 ಲಕ್ಷ ರೂ., ಬೆಂಗಳೂರು ನಗರ 4 ಲಕ್ಷ ರೂ., ದಕ್ಷಿಣ ಕನ್ನಡ 2.40 ಲಕ್ಷ ರೂ., ಧಾರವಾಡ 23 ಕೋ. ರೂ., ಹಾವೇರಿ 95 ಕೋ. ರೂ., ಉತ್ತರ ಕನ್ನಡ 1 ಕೋ. ರೂ., ಚಿಕ್ಕಬಳ್ಳಾಪುರ 38 ಕೋ. ರೂ., ಕಲಬುರಗಿ 656 ಕೋ.ರೂ., ಉಡುಪಿ 3 ಲಕ್ಷ ರೂ., ಚಿಕ್ಕಮಗಳೂರು 48 ಲಕ್ಷ ರೂ., ಚಿತ್ರದುರ್ಗ 33 ಕೋ. ರೂ., ದಾವಣಗೆರೆ 44 ಕೋ. ರೂ. ಗದಗ 242 ಕೋ. ರೂ., ಹಾಸನ 26 ಕೋ. ರೂ., ಕೊಡಗು 23 ಲಕ್ಷ ರೂ., ಕೊಲಾರ 1 ಕೋ. ರೂ., ರಾಮನಗರ 2 ಕೋ. ರೂ., ಶಿವಮೊಗ್ಗ 13 ಕೋ. ರೂ., ತುಮಕೂರು 1 ಕೋ. ರೂ., ವಿಜಯನಗರ 70 ಕೋ. ರೂ., ವಿಜಯಪುರ 97 ಕೋ. ರೂ., ಬಳ್ಳಾರಿ 32 ಲಕ್ಷ ರೂ., ಕೊಪ್ಪಳ 34 ಕೋ. ರೂ., ಮೈಸೂರು 39 ಲಕ್ಷ ರೂ., ಯಾದಗಿರಿ 18 ಕೋ. ರೂ., ಬಾಗಲಕೋಟೆ 14 ಕೋ. ರೂ., ಬೆಳಗಾವಿ 24 ಕೋ. ರೂ., ಬೀದರ್ 13 ಕೋ. ರೂ., ಚಾಮರಾಜನಗರ 2 ಕೋ.ರೂ., ಮಂಡ್ಯ 3 ಕೋ. ರೂ., ರಾಯಚೂರು 3 ಕೋ. ರೂ., ಒಟ್ಟು 1,449 ಕೋ. ರೂ.

 ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Mon, 11 Aug 2025 07:43:31 +0530 shivuagrico
Bus strike&ಇಂದಿನಿಂದ ಸರ್ಕಾರಿ ಬಸ್ ಬಂದ್,ಶಾಲಾ ಕಾಲೇಜುಗಳಿಗೆ ರಜೆ? https://krushirushi.in/Bus-strike-2238 https://krushirushi.in/Bus-strike-2238 Bus strike-ಇಂದಿನಿಂದ ಸರ್ಕಾರಿ ಬಸ್ ಬಂದ್,ಶಾಲಾ ಕಾಲೇಜು ಮಕ್ಕಳು ಸೇರಿಂದತೆ 1 ಕೋಟಿ ಪ್ರಯಾಣಿಕರಿಗೆ ಸಂಕಷ್ಟ


ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ಸರ್ಕಾರ ಜತೆ ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಇದರ ನಡುವೆ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್‌ ಸೂಚನೆ ನೀಡಿದೆ. ಅದರ ಹೊರತಾಗಿಯೂ ತಮ್ಮ ನಿರ್ಧಾರದಿಂದ ಹಿಂದೆ ಸರಿಯದ ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಮಂಗಳವಾರ ಬೆಳಗ್ಗೆಯಿಂದಲೇ ಮುಷ್ಕರ ನಡೆಸುವುದಾಗಿ ಘೋಷಿಸಿದೆ. ಇದರಿಂದ ರಾಜ್ಯಾದ್ಯಂತ ಬಸ್ಸುಗಳ ಸೇವೆ ವ್ಯತ್ಯಯವಾಗಿ 1 ಕೋಟಿಗೂ ಹೆಚ್ಚು ಪ್ರಯಾಣಿಕರು ಪರದಾಡುವ ಆತಂಕ ಎದುರಾಗಿದೆ.

ಈ ನಡುವೆ ಹೈಕೋರ್ಟ್‌ ಆದೇಶದ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲು ಜಂಟಿಕ್ರಿಯಾ ಸಮಿತಿ ನಿರ್ಧರಿಸಿದ್ದು, ಮಂಗಳವಾರ ಬೆಳಗ್ಗೆ ಸಮಿತಿ ಪದಾಧಿಕಾರಿಗಳ ಸಭೆ ನಡೆಸಿ ಮುಷ್ಕರದ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದೆ. ಒಂದು ವೇಳೆ ಕ್ರಿಯಾ ಸಮಿತಿ ಪೂರ್ವ ನಿರ್ಧಾರದಂತೆ ಮುಷ್ಕರಕ್ಕೆ ಇಳಿದರೆ, ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ಬಸ್‌ಗಳ ಸಂಚಾರದಲ್ಲಿ ಭಾರೀ ವ್ಯತ್ಯಯವಾಗುವುದು ಸ್ಪಷ್ಟ.

ಕೋರ್ಟ್‌ ಆದೇಶ:

38 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಪಾವತಿ ಮತ್ತು 2024ರ ಜನವರಿಯಿಂದ ಹೊಸದಾಗಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ನಿರ್ಧರಿಸಿದ್ದಾರೆ. ಆದರೆ, ಸರ್ಕಾರದ ನಿಲುವು ತಿಳಿಯುವ ಸಂಬಂಧ ಸಾರಿಗೆ ನೌಕರರು ಮುಷ್ಕರದ ಆರಂಭವನ್ನು ಒಂದು ದಿನದ ಮಟ್ಟಿಗೆ ತಡೆಯುವಂತೆ ಸಾರಿಗೆ ನೌಕರರಿಗೆ ಹೈಕೋರ್ಟ್‌ ಸೋಮವಾರ ಸೂಚನೆ ನೀಡಿದೆ.

ಈ ಆದೇಶದಲ್ಲಿ ತಮ್ಮನ್ನು ಪ್ರತಿವಾದಿಯನ್ನಾಗಿಸಿಲ್ಲ ಹಾಗೂ ಹೈಕೋರ್ಟ್‌ ಆದೇಶ ದೊರೆಯುವಲ್ಲಿ ವಿಳಂಬವಾದ ಕಾರಣ ಮುಷ್ಕರ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸ್ಪಷ್ಟಪಡಿಸಿತು. ಹೀಗಾಗಿ ಬೆಳಗ್ಗೆ 6 ಗಂಟೆಯಿಂದ ರಾಜ್ಯದೆಲ್ಲೆಡೆ ಸರ್ಕಾರಿ ಸಾರಿಗೆ ಸೇವೆ ಸ್ಥಗಿತಗೊಳ್ಳಲಿದೆ ಎಂದು ತಿಳಿಸಲಾಗಿದೆ.

1 ಲಕ್ಷ ನೌಕರರು, 25 ಸಾವಿರ ಬಸ್‌ಗಳು:

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಲ್ಲಿ 1 ಲಕ್ಷಕ್ಕೂ ನೌಕರರು ಕೆಲಸ ಮಾಡುತ್ತಿದ್ದು, 26 ಸಾವಿರ ಬಸ್‌ಗಳಲ್ಲಿ ಸೇವೆ ನೀಡಲಾಗುತ್ತಿದೆ. ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಮುಷ್ಕರದಲ್ಲಿ ಬಹುತೇಕ ಎಲ್ಲ ನೌಕರರು ಭಾಗಿಯಾಗಲಿದ್ದಾರೆ. ನಾಲ್ಕೂ ನಿಗಮಗಳ ಬಸ್‌ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಲಿದೆ. ಇನ್ನು, ಬಿಎಂಟಿಸಿ ಹೊರತುಪಡಿಸಿ ಉಳಿದ ಮೂರು ನಿಗಮಗಳಲ್ಲಿ ಚಾಲಕ ಮತ್ತು ನಿರ್ವಾಹಕರು ಸೋಮವಾರ ರಾತ್ರಿಯೇ ತಮ್ಮತಮ್ಮ ಊರುಗಳಿಗೆ ತೆರಳಿದ್ದಾರೆ. ಹೀಗಾಗಿ ಮಂಗಳವಾರ ಬೆಳಗ್ಗೆ ಘಟಕಗಳಿಂದ ಬಸ್‌ಗಳನ್ನು ರಸ್ತೆಗಿಳಿಸಲು ನೌಕರರಿಲ್ಲದಂತಾಗಲಿದೆ.

ಖಾಸಗಿ ವಾಹನಗಳ ಸೇವೆಗೂ ತಡೆ:

ಸಾರಿಗೆ ನೌಕರರು ಮುಷ್ಕರದಲ್ಲಿ ಪಾಲ್ಗೊಂಡರೆ ಪರ್ಯಾಯವಾಗಿ ಸೇವೆ ನೀಡಲು ಖಾಸಗಿ ವಾಹನ ಬಳಕೆಗೆ ಸಾರಿಗೆ ಇಲಾಖೆ ನಿರ್ಧರಿಸಿತ್ತು. ಅದಕ್ಕಾಗಿ ಮಂಗಳವಾರದಿಂದಲೇ ಸೇವೆ ಆರಂಭಿಸುವಂತೆಯೂ ಖಾಸಗಿ ವಾಹನ ಮಾಲೀಕರ ಸಂಘಟನೆಗಳಿಗೆ ಸೂಚಿಸಲಾಗಿತ್ತು. ಆದರೆ, ಹೈಕೋರ್ಟ್‌ ಮುಷ್ಕರ ಮುಂದೂಡುವ ಆದೇಶ ನೀಡಿದ ಹಿನ್ನೆಲೆಯಲ್ಲಿ, ಮಂಗಳವಾರದ ಬದಲು ಬುಧವಾರದಿಂದ ಸೇವೆ ನೀಡಲು ಸಿದ್ಧರಾಗಿರುವಂತೆ ಎಂದು ಸಾರಿಗೆ ಇಲಾಖೆಯು ಖಾಸಗಿ ವಾಹನ ಮಾಲೀಕರ ಸಂಘಟನೆಗಳಿಗೆ ತಿಳಿಸಿದೆ. ಹೀಗಾಗಿ ಸರ್ಕಾರಿ ಬಸ್‌ಗಳು ರಸ್ತೆಗಿಳಿಯದಿದ್ದರೆ ಖಾಸಗಿ ವಾಹನಗಳ ಸೇವೆಯೂ ಮಂಗಳವಾರ ಕಷ್ಟ ಎನ್ನುವಂತಾಗಿದೆ.

ಎಲೆಕ್ಟ್ರಿಕ್‌ ಬಸ್‌ಗಳು ಸೇವೆಯಲ್ಲಿ:

ನಾಲ್ಕೂ ನಿಗಮಗಳಲ್ಲಿ ಸುಮಾರು 1,700 ಎಲೆಕ್ಟ್ರಿಕ್‌ ಬಸ್‌ಗಳು ಸೇವೆ ನೀಡುತ್ತಿವೆ. ಅದರಲ್ಲಿ ಬಿಎಂಟಿಸಿ ಒಂದರಲ್ಲೇ 1,500 ಎಲೆಕ್ಟ್ರಿಕ್‌ ಬಸ್‌ಗಳು ಸಂಚರಿಸುತ್ತಿವೆ. ಆ ಬಸ್‌ಗಳಲ್ಲಿ ಖಾಸಗಿ ಚಾಲಕರನ್ನು ನಿಯೋಜಿಸಲಾಗಿದೆ. ಆ ಚಾಲಕರು ಸಾರಿಗೆ ನೌಕರರ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿಲ್ಲ. ಆದ್ದರಿಂದ ಎಲೆಕ್ಟ್ರಿಕ್‌ ಬಸ್‌ಗಳು ಮುಷ್ಕರದ ಸಂದರ್ಭದಲ್ಲಿ ಸೇವೆ ನೀಡಲಿವೆ.

ಎಸ್ಮಾ ಜಾರಿ, ರಜೆ ರದ್ದು

ಸಾರಿಗೆ ಸೇವೆ ಅಗತ್ಯ ಸೇವೆ ವ್ಯಾಪ್ತಿಯಲ್ಲಿ ಬರುವ ಕಾರಣದಿಂದಾಗಿ ಸಾರಿಗೆ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಈಗಾಗಲೇ ಎಸ್ಮಾ ಜಾರಿಗೊಳಿಸಲಾಗಿದೆ. ಅದರ ಜತೆ ರಜೆಯಲ್ಲಿರುವ ನೌಕರರಿಗೆ ರಜೆ ರದ್ದುಗೊಳಿಸಿ, ಕರ್ತವ್ಯಕ್ಕೆ ಹಾಜರಾಗುವಂತೆಯೂ ಸೂಚಿಸಲಾಗಿದೆ. ಇನ್ನು, ಎಲ್ಲ ಘಟಕಗಳಲ್ಲೂ ನೌಕರರಿಗೆ ಆಯಾ ಘಟಕ ವ್ಯವಸ್ಥಾಪಕರ ಮೂಲಕ ಹೈಕೋರ್ಟ್‌ ಆದೇಶ ಮತ್ತು ಎಸ್ಮಾ ಜಾರಿಯಲ್ಲಿರುವ ಕಾರಣ ಯಾರೂ ಮುಷ್ಕರದಲ್ಲಿ ಭಾಗಿಯಾದಂತೆ ಸೂಚನೆಯನ್ನೂ ನೀಡಲಾಗಿದೆ. ಒಂದು ವೇಳೆ ನೌಕರರು ಮುಷ್ಕರದಲ್ಲಿ ಪಾಲ್ಗೊಂಡರೆ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಮತ್ತು ಕರ್ತವ್ಯ ಹಾಜರಾಗದವರಿಗೆ ವೇತನ ನೀಡದಿರಲೂ ಸಾರಿಗೆ ನಿಗಮಗಳು ನಿರ್ಧರಿಸಿವೆ.

ಗೊಂದಲದಲ್ಲಿ ನೌಕರರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಭೆ ಮುಕ್ತಾಯದ ನಂತರವೂ ಸಾರಿಗೆ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುವ ಮನಸ್ಥಿತಿಯಲ್ಲಿದ್ದರು. ಆದರೆ, ಹೈಕೋರ್ಟ್‌ ಒಂದು ದಿನದ ಮಟ್ಟಿಗೆ ಮುಷ್ಕರಕ್ಕೆ ತಡೆ ನೀಡಿದ ಕಾರಣಕ್ಕಾಗಿ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಬೇಕೇ-ಬೇಡವೇ ಎಂಬ ಗೊಂದಲಕ್ಕೆ ಸಿಲುಕಿದರು. ಅದರ ನಡುವೆಯೇ ಜಂಟಿ ಕ್ರಿಯಾ ಸಮಿತಿ ಹೈಕೋರ್ಟ್‌ ಆದೇಶವಿದ್ದರೂ ಮುಷ್ಕರ ನಡೆಸುವುದಾಗಿ ತಿಳಿಸಿದ್ದರಿಂದ ನೌಕರರ ಗೊಂದಲ ಮತ್ತಷ್ಟು ಹೆಚ್ಚುವಂತಾಗಿದೆ.

ನೌಕರರಿಗೆ ಎಂಡಿ ಅವರ ಸಂದೇಶ

ಹೈಕೋರ್ಟ್‌ ಆದೇಶದ ಕುರಿತು ಸಾರಿಗೆ ನೌಕರರಿಗೆ ಮಾಹಿತಿ ಇರುವುದಿಲ್ಲ ಎಂದು ಅರಿತ ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ತಮ್ಮ ನೌಕರರಿಗೆ, ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಸೋಮವಾರ ಸಂಜೆಯೇ ಸಂದೇಶ ರವಾನಿಸಿದ್ದಾರೆ. ಇದರ ಜತೆಗೆ ಸಾರಿಗೆ ನೌಕರರ ಬೇಡಿಕೆಗೆ ಮುಖ್ಯಮಂತ್ರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮುಷ್ಕರ ನಡೆಸದಂತೆ ಹೈಕೋರ್ಟ್‌ ಆದೇಶವೂ ಇದೆ. ಹೀಗಾಗಿ ನೌಕರರು ಮುಷ್ಕರದಲ್ಲಿ ಪಾಲ್ಗೊಳಬಾರದು ಎಂದು ಕೋರಿದ್ದಾರೆ.

ಮುಷ್ಕರಕ್ಕೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ದಾಖಲಾಗಿರುವ ಅರ್ಜಿಯಲ್ಲಿ ಜಂಟಿ ಕ್ರಿಯಾ ಸಮಿತಿಯನ್ನು ಪ್ರತಿವಾದಿಯಾಗಿಸಿಲ್ಲ. ಅಲ್ಲದೆ, ಹೈಕೋರ್ಟ್‌ ಆದೇಶದ ಪ್ರತಿ ಸಿಗುವಲ್ಲಿ ತಡವಾದ ಕಾರಣ, ಈ ಹಿಂದೆ ಕರೆ ನೀಡಲಾಗಿದ್ದಂತೆ ಮುಷ್ಕರ ಆರಂಭಿಸಲಾಗುತ್ತಿದೆ. ಈ ಬಗ್ಗೆ ಮಂಗಳವಾರ ಕಾನೂನು ತಜ್ಞರ ಸಲಹೆಯನ್ನೂ ಪಡೆದು, ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಅಲ್ಲಿಯವರೆಗೆ ನೌಕರರ ಮುಷ್ಕರ ಮುಂದುವರಿಯಲಿದೆ.

- ಅನಂತ ಸುಬ್ಬರಾವ್‌

ಅಧ್ಯಕ್ಷ ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ

--

ಹೈಕೋರ್ಟ್‌ ಆದೇಶದಿಂದಾಗಿ ಮಂಗಳವಾರದ ಮುಷ್ಕರಕ್ಕೆ ನಾವು ಬೆಂಬಲ ನೀಡುತ್ತಿಲ್ಲ. ಕಾನೂನು ತಜ್ಞರ ಸಲಹೆ ಕೇಳಿದ್ದೇವೆ. ನ್ಯಾಯಾಲಯದ ವಿಚಾರವಾಗಿರುವುದರಿಂದಾಗಿ ಎಚ್ಚರಿಕೆಯಿಂದ ನಡೆದುಕೊಳ್ಳಬೇಕಿದೆ. ಮಂಗಳವಾರ ಹೈಕೋರ್ಟ್‌ ಮಾಡುವ ಆದೇಶದ ನಂತರ ಮುಷ್ಕರದ ಕುರಿತು ನಿರ್ಧರಿಸುತ್ತೇವೆ.

- ಚಂದ್ರಶೇಖರ್‌,

ಅಧ್ಯಕ್ಷ, ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ

]]>
Tue, 05 Aug 2025 07:38:29 +0530 shivuagrico
Aslesha male&ಇಂದಿನಿಂದ ಆಶ್ಲೇಷ ಮಳೆ,ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ https://krushirushi.in/Aslesha-male-2237 https://krushirushi.in/Aslesha-male-2237 Aslesha male-ಇಂದಿನಿಂದ ಆಶ್ಲೇಷ ಮಳೆ,ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಆಗಸ್ಟ್ 14ರ ತನಕವೂ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು 15ರಿಂದ 20ರ ತನಕ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಚುರುಕಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಆಗಸ್ಟ್ 16ರ ತನಕ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು, 17ರಿಂದ 19ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಗದಗ, ದಾವಣಗೆರೆ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ರಾಯಚೂರು, ಯಾದಗಿರಿ ಜಿಲ್ಲೆಗಳ ಅಂದ್ರಾ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ 
ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. 
ಈಗಿನಂತೆ ಆಗಸ್ಟ್ 12ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಆಗಸ್ಟ್ 19ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಆಗಸ್ಟ್ 17ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ 16ರಂದು ಒಡಿಸ್ಸಾ ಕರಾವಳಿ ಮೂಲಕ ಪ್ರವೇಶಿಸುವ ಸಾಧ್ಯತೆಗಳಿವೆ.

Male nakshatragalu-2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು


2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-14-4-2025

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-28-4-2025

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2025

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-25-5-2025

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-6-7-2025

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-20-7-2025

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-31-8-2025

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2025

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-27-9-2025

ಉತ್ತಮ ಮಳೆ

14.ಚಿತ್ತ

ದಿನಾಂಕ-11-10-2025

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-24-10-2025

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2025

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs  ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in  website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.     

https://krushirushi.in/contact-us


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ

]]>
Sun, 03 Aug 2025 21:38:41 +0530 shivuagrico
ನಿಮಗೆ ಪಿಎಂ ಕಿಸಾನ್ ಹಣ ಜಮಾ ಆಗಿಲ್ಲವೇ? ಹಾಗಾದರೆ ಇಲ್ಲಿದೆ ಕಾರಣ ಮತ್ತು ಪರಿಹಾರ&Pmkisan amount not credited https://krushirushi.in/Pmkisan-amount-not-credited-2236 https://krushirushi.in/Pmkisan-amount-not-credited-2236 ನಿಮಗೆ ಪಿಎಂ ಕಿಸಾನ್ ಹಣ ಜಮಾ ಆಗಿಲ್ಲವೇ? ಹಾಗಾದರೆ ಇಲ್ಲಿದೆ ಕಾರಣ ಮತ್ತು ಪರಿಹಾರ-Pmkisan amount not credited

ಕಾರಣ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/

ಮೊದಲು know your status ಮೇಲೆ ಕ್ಲಿಕ್ ಮಾಡಿ

ನಂತರ know your register number ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ

ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.

ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ

ನಂತರ update your details ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ

 Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.

ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ

Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.

FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ  ಕಾರಣ ಮತ್ತು ಪರಿಹಾರ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

fruitspmk.gov.in ಪೋರ್ಟಲ್ ನಲ್ಲಿ

1

ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ

ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು                                                                     ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು

ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ  (NIC)                     ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ.            ಆ) ಸಮಸ್ಯಾತ್ಮಕ  ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ.

2

ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು

ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ

ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ    ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ

3

ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು

 ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ

ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ   ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ

4

ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ

ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ

OPERATOR ಲಾಗಿನ್ (RSK, ADA office, JDA office)  OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು

5

01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ

ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ

ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ)

6

Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು

ಜಿಲ್ಲೆಗಳಲ್ಲಿ  OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ

AAO ಲಾಗಿನ್  (RSK, ADA office, JDA office)  AAO ಲಾಗಿನ್ನಲ್ಲಿ  ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ,  ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

7

ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ

ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ)

AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.

8

PFMS rejected

Aadhaar Number is not seeded in NPCI

ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ

Bank Name And IFSC Code are not related to each other

ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ

Bank Name is not as per PFMS Bank Master.

Beneficiary is rejected as Account Type is other than SB / SBA / JD

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ)

Duplicate Beneficiary Name , Bank Account No and Bank Name not allowed for same scheme

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

IFSC Code  either not present or currently inactive in tbl BankBranch

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

Incorrect Aadhaar Number

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

One or more mandatory tags values are missing.

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

Rejected by Bank, Account No does not exist in Bank/INVALID/CLOSED

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

9

Amount credited to Account Number-NA

Aadhaar number based payment by GoI

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ.

10

PAYMENT STOPPED BY STATE

 XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳಿದ್ದರೆ ಕೇಂದ್ರ ಕಚೇರಿ ಮಾಹಿತಿ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

11

Transaction failed

ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ.

12

ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ

OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳ   ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

13

ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು

ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ.

ಕೇಂದ್ರ ಸರ್ಕಾರ ದ   pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ.

]]>
Sun, 03 Aug 2025 07:23:11 +0530 shivuagrico
ನನ್ನ ಖಾತೆಗೆ ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ&Pmkisan 20th instalment amount credited to my account https://krushirushi.in/Pmkisan-20th-instalment-amount-credited-to-my-account-2235 https://krushirushi.in/Pmkisan-20th-instalment-amount-credited-to-my-account-2235 ನನ್ನ ಖಾತೆಗೆ ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ-Pmkisan 20th instalment amount credited to my account

ಇಲ್ಲಿಯವರೆಗೆ 19 ಕಂತುಗಳನ್ನು ಸರ್ಕಾರ ನೀಡಿದೆ. ಫೆಬ್ರುವರಿ 24ರಂದು 9.8 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ 19ನೇ ಕಂತಿನ ಹಣ ಬಿಡುಗಡೆ ಮಾಡಲಾಗಿತ್ತು. ಈ 9.8 ಕೋಟಿ ರೈತರಲ್ಲಿ 2.41 ಕೋಟಿ ಮಹಿಳೆಯರೇ ಇದ್ದಾರೆ.

ಇಂದು 9.7 ಕೋಟಿ ಹೆಚ್ಚು ರೈತರಿಗೆ ಪಿಎಂ ಕಿಸಾನ್ 20ನೇ ಕಂತು ಬಿಡುಗಡೆಯಾಗಿದೆ

ಪಿಎಂ ಕಿಸಾನ್(kisan samman) ಅರ್ಹತೆಯ ಮಾನದಂಡಗಳೇನು?
ಎಲ್ಲ ಅರ್ಹ ಫಲಾನುಭವಿಗಳು ಕನಿಷ್ಠ ಪ್ರಮಾಣದ ಭೂಮಿ ಹೊಂದಿರಬೇಕು. ಇ-ಕೆವೈಸಿ ಮಾಡಿಸಿಕೊಳ್ಳಬೇಕು ಮತ್ತು ಪಿಎಂ-ಕಿಸಾನ್ ಪೋರ್ಟಲ್‌ನಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು. 
ನಿಧಿಯನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಗಾಯಿಸಲಾಗುತ್ತದೆ ಎಂದು ಅವರು ಹೇಳಿದರು.

ಇಲ್ಲಿಯವರೆಗೂ 19 ಕಂತುಗಳಲ್ಲಿ 3.68 ಲಕ್ಷ ಕೋಟಿ ಪಿಎಂ ಕಿಸಾನ್ ಹಣ ರೈತರ ಖಾತೆಗೆ


ಇದುವರೆಗೆ 3.68 ಲಕ್ಷ ಕೋಟಿ ರೂಪಾಯಿಗಳನ್ನು 19 ಕಂತುಗಳಲ್ಲಿ ದೇಶದಾದ್ಯಂತದ ರೈತರಿಗೆ ವಿತರಿಸಲಾಗಿದೆ

ನಿಮಗೇಷ್ಟು ಜಮಾ ಹೀಗೆ ಚೆಕ್ ಮಾಡಿ-Pmkisan beneficiary status 

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/

ಮೊದಲು know your status ಮೇಲೆ ಕ್ಲಿಕ್ ಮಾಡಿ

ನಂತರ know your register number ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ

ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.

ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ

ನಂತರ update your details ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ

 Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.

ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ

Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.

FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ  ಕಾರಣ ಮತ್ತು ಪರಿಹಾರ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

fruitspmk.gov.in ಪೋರ್ಟಲ್ ನಲ್ಲಿ

1

ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ

ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು                                                                     ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು

ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ  (NIC)                     ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ.            ಆ) ಸಮಸ್ಯಾತ್ಮಕ  ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ.

2

ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು

ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ

ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ    ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ

3

ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು

 ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ

ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ   ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ

4

ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ

ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ

OPERATOR ಲಾಗಿನ್ (RSK, ADA office, JDA office)  OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು

5

01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ

ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ

ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ)

6

Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು

ಜಿಲ್ಲೆಗಳಲ್ಲಿ  OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ

AAO ಲಾಗಿನ್  (RSK, ADA office, JDA office)  AAO ಲಾಗಿನ್ನಲ್ಲಿ  ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ,  ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

7

ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ

ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ)

AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.

8

PFMS rejected

Aadhaar Number is not seeded in NPCI

ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ

Bank Name And IFSC Code are not related to each other

ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ

Bank Name is not as per PFMS Bank Master.

Beneficiary is rejected as Account Type is other than SB / SBA / JD

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ)

Duplicate Beneficiary Name , Bank Account No and Bank Name not allowed for same scheme

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

IFSC Code  either not present or currently inactive in tbl BankBranch

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

Incorrect Aadhaar Number

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

One or more mandatory tags values are missing.

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

Rejected by Bank, Account No does not exist in Bank/INVALID/CLOSED

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

9

Amount credited to Account Number-NA

Aadhaar number based payment by GoI

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ.

10

PAYMENT STOPPED BY STATE

 XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳಿದ್ದರೆ ಕೇಂದ್ರ ಕಚೇರಿ ಮಾಹಿತಿ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

11

Transaction failed

ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ.

12

ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ

OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳ   ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

13

ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು

ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ.

ಕೇಂದ್ರ ಸರ್ಕಾರ ದ   pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ.

]]>
Sat, 02 Aug 2025 07:43:37 +0530 shivuagrico
ಪಿಎಂ ಕಿಸಾನ್ 20ನೇ ಕಂತಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್,ಈ ಪಟ್ಟಿಯಲ್ಲಿರುವ 7 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ&pmkisan 20th instalment ineligible list https://krushirushi.in/Pmkisan-20th-instalment-ineligible-list-2234 https://krushirushi.in/Pmkisan-20th-instalment-ineligible-list-2234 ಪಿಎಂ ಕಿಸಾನ್ 20ನೇ ಕಂತಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್,ಈ ಪಟ್ಟಿಯಲ್ಲಿರುವ 7 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ-pmkisan ineligible list

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ನೋಂದಾಯಿಸಿದ್ಧ ರಾಜ್ಯದ 7 ಲಕ್ಷಕ್ಕೂ ಅಧಿಕ ರೈತರನ್ನು ಅನರ್ಹಗೊಳಿಸಲಾಗಿದೆ.


ರಾಜ್ಯದಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಆರಂಭವಾದ ಒಂದು ವರ್ಷದಲ್ಲಿ 53.81 ಲಕ್ಷಕ್ಕೂ ಅಧಿಕ ರೈತರು ನೋಂದಣಿ ಮಾಡಿಸಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದರು.

ಇವರ ಪೈಕಿ 7 ಲಕ್ಷಕ್ಕೂ ಅಧಿಕ ರೈತರನ್ನು ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಅನರ್ಹಗೊಳಿಸಲಾಗಿದೆ.

ಭೂ ದಾಖಲೆಗಳ ಕೊರತೆ, ಇ-ಕೆವೈಸಿ ಸಮಸ್ಯೆ, ತೆರಿಗೆ ಪಾವತಿದಾರರು, ಸರ್ಕಾರಿ ನೌಕರಿ ಹೊಂದಿರುವುದು, ಸಾಂವಿಧಾನಿಕ ಹುದ್ದೆಗಳಲ್ಲಿ ಕಾರ್ಯನಿರ್ವಹಣೆ ಸೇರಿದಂತೆ ಅನೇಕ ಕಾರಣಗಳಿಂದ ಹಂತ ಹಂತವಾಗಿ ಪರಿಶೀಲನೆ ನಡೆಸಿ ಸುಮಾರು 7 ಲಕ್ಷ ರೈತರನ್ನು ಅನರ್ಹಗೊಳಿಸಲಾಗಿದೆ.

2018ರಲ್ಲಿ ಯೋಜನೆ ಆರಂಭವಾದ ಸಂದರ್ಭದಲ್ಲಿ 19,819 ರೈತರು ನೋಂದಾಯಿಸಿದ್ದು, 2019-20 ರಲ್ಲಿ 53,81,184 ರೈತರು ನೋಂದಾಯಿಸಿದ್ದರು. ಅರ್ಹರಲ್ಲದವರು ಕೂಡ ಹೆಸರು ನೋಂದಾಯಿಸಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದರಿಂದ ಪರಿಶೀಲನೆ ಕಾರ್ಯ ಆರಂಭಿಸಲಾಗಿದ್ದು, ಈಗ 47.50 ಲಕ್ಷ ರೈತರು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ.

ರೈತರ ನೋಂದಣಿ ಕಾರ್ಯ ನಿರಂತರವಾಗಿ ನಡೆಯುವುದರಿಂದ ಪ್ರತಿ ಕಂತು ವಿತರಣೆಯ ಸಂದರ್ಭದಲ್ಲಿ ರೈತರ ಸಂಖ್ಯೆ ಹೆಚ್ಚು ಕಡಿಮೆಯಾಗುತ್ತದೆ. ಅರ್ಹರನ್ನು ಸೇರಿಸುವುದು, ಅನರ್ಹರನ್ನು ಕೈಬಿಡುವ ಪ್ರಕ್ರಿಯೆ ನಿರಂತರವಾಗಿರುತ್ತದೆ.

ಆಧಾರ್ ಮತ್ತು ಪಹಣಿಯೊಂದಿಗೆ ಫ್ರೂಟ್ಸ್ ಐಡಿ ತಂತ್ರಾಂಶದಲ್ಲಿ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿ ಇ-ಕೆವೈಸಿಯೊಂದಿಗೆ ಕಿಸಾನ್ ಸಮ್ಮಾಣ್ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಜಮೀನಿನ ಮಾಲೀಕರು ನಿಧನರಾಗಿದ್ದಲ್ಲಿ ಇತರೆ ವಾರಸುದಾರರು ಪೌತಿ ಖಾತೆ ಮಾಡಿಸಿದರೆ ಯೋಜನೆಗೆ ಅರ್ಹರಾಗುತ್ತಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2019 ರ ನಂತರ ಜಮೀನು ಖರೀದಿಸಿದವರು ಮತ್ತು ತಂದೆಯ ಜಮೀನನ್ನು ಭಾಗ ಮಾಡಿಕೊಂಡಿದ್ದರೆ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಲಾಗಿದೆ. ಒಂದು ವೇಳೆ ತಾಂತ್ರಿಕ ದೋಷ, ಇ-ಕೆವೈಸಿ ಸಮಸ್ಯೆಯಿಂದ ಯಾವುದೇ ರೈತರ ಹೆಸರು ಪಟ್ಟಿಯಿಂದ ಹೊರಗುಳಿದಿದ್ದರೆ ಮತ್ತೊಮ್ಮೆ ಪರಿಶೀಲನೆಗೆ ಒಳಪಡಿಸಲು ಅವಕಾಶವಿದೆ. ಈ ಯೋಜನೆಯಡಿ ವಾರ್ಷಿಕ 6,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. 3 ಕಂತುಗಳಲ್ಲಿ 4 ತಿಂಗಳಿಗೊಮ್ಮೆ ನೇರವಾಗಿ ರೈತರ ಖಾತೆಗೆ 2 ಸಾವಿರ ರೂ. ವರ್ಗಾಯಿಸಲಾಗುವುದು.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 20ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 20th instalment eligible list

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

Pmkisan 20th instalment ineligible list-ಪಿಎಂ ಕಿಸಾನ್ 19ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Sat, 02 Aug 2025 07:02:46 +0530 shivuagrico
ಇಕೆವೈಸಿ ಆದವರಿಗೆ ಮಾತ್ರ ಪಿಎಂ ಕಿಸಾನ್ 20ನೇ ಕಂತು, ಈಗಾಗಲೇ ಇಕೆವೈಸಿ ಆಗಿದ್ದರೂ ಇನ್ನೊಂದು ಬಾರಿ ಇಕೆವೈಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ&Pmkisan ekyc Status https://krushirushi.in/Pmkisan-ekyc-starus-2233 https://krushirushi.in/Pmkisan-ekyc-starus-2233 ಇಕೆವೈಸಿ ಆದವರಿಗೆ ಮಾತ್ರ ಪಿಎಂ ಕಿಸಾನ್ 20ನೇ ಕಂತು, ಈಗಾಗಲೇ ಇಕೆವೈಸಿ ಆಗಿದ್ದರೂ ಇನ್ನೊಂದು ಬಾರಿ ಇಕೆವೈಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ-Pmkisan ekyc Status

ಪಿ.ಎಂ.ಕಿಸಾನ್ ಯೋಜನೆಯಡಿ ರೈತ ಬಂಧುಗಳು ಆರ್ಥಿಕ ನೆರವು ಪಡೆಯಲು e-KYC ಕಡ್ಡಾಯಗೊಳಿಸಲಾಗಿದೆ. e-KYC ಮಾಡಿಸಲು ಬಾಕಿ ಇರುವ ರೈತರು ಕೂಡಲೇ e-KYC ಮಾಡಿಸಿಕೊಳ್ಳಲು ಕೋರಿದೆ.


ಸದ್ಯದಲ್ಲೇ ಪಿಎಂ ಕಿಸಾನ್ ಯೋಜನೆಯ 20 ನೇ ಕಂತು ಬಿಡುಗಡೆಯಾಗುತ್ತಿದ್ದು, ಇಕೆವೈಸಿ ಆದವರಿಗೆ ಮಾತ್ರ ಜಮಾ ಆಗಲಿದೆ.ಆದ್ದರಿಂದ ಈಗಾಗಲೇ ಇಕೆವೈಸಿ ಆಗಿದ್ದರೂ ಸಹ ಇನ್ನೊಂದು ಬಾರಿ ಈ ಕೆಳಗಿನ 3 ವಿಧಾನಗಳ ಮೂಲಕ ಇಕೆವೈಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ.

ವಿಧಾನ 1.

OTP ಆಧಾರಿತ ಇಕೆವೈಸಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/aadharekyc.aspx

ನಂತರ ನಿಮ್ಮ ಆಧಾರ್ ನಂಬರ್ ಹಾಕಿ search ಮೇಲೆ ಕ್ಲಿಕ್ ಮಾಡಿ

ಈಗಾಗಲೇ ಇಕೆವೈಸಿ ಆಗಿದ್ದರೆ,Ekyc is already done ಎಂದು ತೋರಿಸುತ್ತದೆ.

ಇಲ್ಲದಿದ್ದರೆ ನಿಮ್ಮ ಮೊಬೈಲ್ ನಂಬರ್ ಹಾಕಿ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ ಇಕೆವೈಸಿ ಮಾಡಿಕೊಳ್ಳಿ

ವಿಧಾನ 2.

Biometric ಆಧಾರಿತ ಇಕೆವೈಸಿ

ನಿಮಗೆ OTP ಬರದಿದ್ದರೆ ನಾಗರಿಕ ಸೇವಾ ಕೇಂದ್ರ ಅಥವಾ ಗ್ರಾಮಒನ್ ಗೆ ಹೋಗಿ ನಿಮ್ಮ ಹೆಬ್ಬೆಟ್ಟನ್ನು ಒತ್ತಿ ಇಕೆವೈಸಿ ಮಾಡಿಸಿಕೊಳ್ಳಿ

ವಿಧಾನ 3.

ಮುಖಚರ್ಯೆ(Face authentication) ಆಧಾರಿತ ಇಕೆವೈಸಿ

ಈ ಕೆಳಗಿನ ಲಿಂಕ್ ಮೋಲೆ ಕ್ಲಿಕ್ ಮಾಡಿ ಅಪ್ಲಿಕೇಶನ್ ಡೌನ್ಲೊಡ್ ಮಾಡಿಕೊಳ್ಳಿ

https://play.google.com/store/apps/dev?id=6767333309690298459

ನಂತರ ನಿಮ್ಮ ಮುಖ ಸ್ಕ್ಯಾನ್ ಮಾಡಿ Ekyc ಮಾಡಿ

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ಕಛೇರಿಯನ್ನು ಸಂಪರ್ಕಿಸಿ ಇಕೆವೈಸಿ ಮಾಡಿಸಿಕೊಳ್ಳಿ,ಈ ಮಾಹಿತಿಯನ್ನು ಇತರೆ ರೈತರಿಗೂ ಹಂಚಿಕೊಳ್ಳಿ

]]>
Fri, 01 Aug 2025 08:19:31 +0530 shivuagrico
ಅರ್ಹ ಫಲಾನುಭವಿಗಳಿಗೆ ಅಗಸ್ಟ್ 2 ರಂದು ಪಿಎಂ ಕಿಸಾನ್ 20ನೇ ಕಂತು,ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ&Pmkisan 20th instalment eligibility https://krushirushi.in/Pmkisan-20th-instalment-eligibility-2232 https://krushirushi.in/Pmkisan-20th-instalment-eligibility-2232 ಅರ್ಹ ಫಲಾನುಭವಿಗಳಿಗೆ ಅಗಸ್ಟ್ 2 ರಂದು ಪಿಎಂ ಕಿಸಾನ್ 20ನೇ ಕಂತು,ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ-Pmkisan 20th instalment eligibility

ಈ ಯೋಜನೆಯಡಿ ಅರ್ಹ ಸಣ್ಣ ಇಡುವಳಿದಾರ ರೈತರಿಗೆ ಒಂದು ವರ್ಷಕ್ಕೆ 3000 ರೂ.ನಂತೆ ಎರಡು ಕಂತುಗಳಲ್ಲಿ ರೂ.6000 ನೀಡಲಾಗುತ್ತದೆ.

ಈ ಬಗ್ಗೆ ಕೃಷಿ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಒಂದು ವರ್ಷಕ್ಕೆ ರೂ. 6000/-ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ. ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರು ಬಾಕಿಯಿರುವ ಇ-ಕೆವೈಸಿ ಮಾಡಿಸಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದೆ.

ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನಲ್ಲಿ ನೋಂದಾಯಿಸಿರುವ ಮೊಬೈಲ್ ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸುವುದು. ಹಾಗೂ ಈಗಾಗಲೇ ಕೃಷಿ ಇಲಾಖೆಯಿಂದ ತಮ್ಮ ಗ್ರಾಮಗಳಿಗೆ ಗ್ರಾಮ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ PMKISAN e-KYC through Face Recognition App ಮೂಲಕ ಇ-ಕೆವೈಸಿ ಮಾಡಿಸುವಲ್ಲಿ ಗ್ರಾಮ ನೋಡಲ್ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ತಿಳಿಸಿರುತ್ತಾರೆ.

2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ 11 ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ. ರೈತರ ವ್ಯವಸಾಯಕ್ಕೆ ನೆರವಾಗಲು ಸರ್ಕಾರ ಈ ಸ್ಕೀಮ್ ಆರಂಭಿಸಿದೆ. ವರ್ಷಕ್ಕೆ 6,000 ರೂ ಹಣವನ್ನು ರೈತರಿಗೆ ನೀಡಲಾಗುತ್ತದೆ. ವರ್ಷಕ್ಕೆ ಮೂರು ಬಾರಿ, ಅಂದರೆ, ನಾಲ್ಕು ತಿಂಗಳಿಗೊಮ್ಮೆ ತಲಾ 2,000 ರೂ ಹಣವನ್ನು ನೇರವಾಗಿ ರೈತರ ಖಾತೆಗಳಿಗೆ ಹಣ ಹಾಕಲಾಗುತ್ತದೆ.

ಇಲ್ಲಿಯವರೆಗೆ 19 ಕಂತುಗಳನ್ನು ಸರ್ಕಾರ ನೀಡಿದೆ. ಫೆಬ್ರುವರಿ 24ರಂದು 9.8 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ 19ನೇ ಕಂತಿನ ಹಣ ಬಿಡುಗಡೆ ಮಾಡಲಾಗಿತ್ತು. ಈ 9.8 ಕೋಟಿ ರೈತರಲ್ಲಿ 2.41 ಕೋಟಿ ಮಹಿಳೆಯರೇ ಇದ್ದಾರೆ.

ಪಿಎಂ ಕಿಸಾನ್(kisan samman) ಅರ್ಹತೆಯ ಮಾನದಂಡಗಳೇನು?
ಎಲ್ಲ ಅರ್ಹ ಫಲಾನುಭವಿಗಳು ಕನಿಷ್ಠ ಪ್ರಮಾಣದ ಭೂಮಿ ಹೊಂದಿರಬೇಕು. ಇ-ಕೆವೈಸಿ ಮಾಡಿಸಿಕೊಳ್ಳಬೇಕು ಮತ್ತು ಪಿಎಂ-ಕಿಸಾನ್ ಪೋರ್ಟಲ್‌ನಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು. 
ನಿಧಿಯನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಗಾಯಿಸಲಾಗುತ್ತದೆ ಎಂದು ಅವರು ಹೇಳಿದರು.

ಇಲ್ಲಿಯವರೆಗೂ 19 ಕಂತುಗಳಲ್ಲಿ 3.68 ಲಕ್ಷ ಕೋಟಿ ಪಿಎಂ ಕಿಸಾನ್ ಹಣ ರೈತರ ಖಾತೆಗೆ


ಇದುವರೆಗೆ 3.68 ಲಕ್ಷ ಕೋಟಿ ರೂಪಾಯಿಗಳನ್ನು 19 ಕಂತುಗಳಲ್ಲಿ ದೇಶದಾದ್ಯಂತದ ರೈತರಿಗೆ ವಿತರಿಸಲಾಗಿದೆ

ನಿಮಗೇಷ್ಟು ಜಮಾ ಹೀಗೆ ಚೆಕ್ ಮಾಡಿ-Pmkisan beneficiary status 

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/

ಮೊದಲು know your status ಮೇಲೆ ಕ್ಲಿಕ್ ಮಾಡಿ

ನಂತರ know your register number ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ

ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.

ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ

ನಂತರ update your details ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ

 Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.

ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ

Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.

FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ  ಕಾರಣ ಮತ್ತು ಪರಿಹಾರ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

fruitspmk.gov.in ಪೋರ್ಟಲ್ ನಲ್ಲಿ

1

ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ

ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು                                                                     ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು

ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ  (NIC)                     ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ.            ಆ) ಸಮಸ್ಯಾತ್ಮಕ  ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ.

2

ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು

ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ

ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ    ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ

3

ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು

 ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ

ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ   ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ

4

ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ

ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ

OPERATOR ಲಾಗಿನ್ (RSK, ADA office, JDA office)  OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು

5

01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ

ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ

ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ)

6

Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು

ಜಿಲ್ಲೆಗಳಲ್ಲಿ  OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ

AAO ಲಾಗಿನ್  (RSK, ADA office, JDA office)  AAO ಲಾಗಿನ್ನಲ್ಲಿ  ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ,  ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

7

ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ

ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ)

AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.

8

PFMS rejected

Aadhaar Number is not seeded in NPCI

ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ

Bank Name And IFSC Code are not related to each other

ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ

Bank Name is not as per PFMS Bank Master.

Beneficiary is rejected as Account Type is other than SB / SBA / JD

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ)

Duplicate Beneficiary Name , Bank Account No and Bank Name not allowed for same scheme

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

IFSC Code  either not present or currently inactive in tbl BankBranch

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

Incorrect Aadhaar Number

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

One or more mandatory tags values are missing.

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

Rejected by Bank, Account No does not exist in Bank/INVALID/CLOSED

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

9

Amount credited to Account Number-NA

Aadhaar number based payment by GoI

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ.

10

PAYMENT STOPPED BY STATE

 XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳಿದ್ದರೆ ಕೇಂದ್ರ ಕಚೇರಿ ಮಾಹಿತಿ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

11

Transaction failed

ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ.

12

ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ

OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳ   ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

13

ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು

ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ.

ಕೇಂದ್ರ ಸರ್ಕಾರ ದ   pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ.

]]>
Thu, 31 Jul 2025 08:50:08 +0530 shivuagrico
ನಾಳೆ ಈ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ ಪಿಎಂ ಕಿಸಾನ್ 20 ನೇ ಕಂತು&Pmkisan 20th instalment date announced  https://krushirushi.in/Pmkisan-20th-instalment-date-announced https://krushirushi.in/Pmkisan-20th-instalment-date-announced ನಾಳೆ ಈ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ ಪಿಎಂ ಕಿಸಾನ್ 20 ನೇ ಕಂತು-Pmkisan 20th instalment date announced 

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬ‌ರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 20ನೇ ಕಂತು ಅಗಸ್ಟ 2ರಂದು 11ಗಂಟೆಗೆ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 20ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 20th instalment date

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Wed, 30 Jul 2025 12:57:03 +0530 shivuagrico
Bele vime 2024&25 ನೇ ಸಾಲಿನ 23 ಲಕ್ಷ ರೈತರ ಖಾತೆಗೆ 1449 ಕೋಟಿ ಬೆಳೆವಿಮೆ ಪರಿಹಾರ ಜಮಾ,ಜಿಲ್ಲಾವಾರು ಬೆಳೆವಿಮೆ ಮಾಹಿತಿ https://krushirushi.in/Bele-vime-2024-25-2230 https://krushirushi.in/Bele-vime-2024-25-2230 Bele vime 2024-25 ನೇ ಸಾಲಿನ 23 ಲಕ್ಷ ರೈತರ ಖಾತೆಗೆ 1449 ಕೋಟಿ ಬೆಳೆವಿಮೆ ಪರಿಹಾರ ಜಮಾ,ಜಿಲ್ಲಾವಾರು ಬೆಳೆವಿಮೆ ಮಾಹಿತಿ
 

2024-25ನೇ ಸಾಲಿನ ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಹಾನಿಗೆ ಬೆಳೆ ವಿಮೆ ಮಂಜೂರಾಗಿದ್ದು, ರಾಜ್ಯಕ್ಕೆ 1,449 ಕೋಟಿ ರೂ. ಬಿಡುಗಡೆಯಾಗಿದೆ. ಕಲಬುರಗಿ ಹಾಗೂ ಗದಗ ಜಿಲ್ಲೆಗೆ ಬಂಪ‌ರ್ ಪರಿಹಾರ ದೊರಕಿದೆ.


ಕಳೆದ ಸಾಲಿನ ಮುಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಯಡಿ ಮುಂಗಾರು ಹಂಗಾಮಿನ ಬೆಳೆಗಳಾದ ತೊಗರಿ, ಭತ್ತ, ರಾಗಿ, ಮೆಕ್ಕೆಜೋಳ, ಸೋಯಾಬಿನ್, ಹತ್ತಿ, ಹೆಸರು, ನೆಲಗಡಲೆ ಮುಂತಾದ ಬೆಳೆಗಳಿಗೆ ಬೆಳೆವಿಮೆ ಮಂಜೂರಾಗಿದೆ.
ಇದರಲ್ಲಿ ಶೇ. ಅರ್ಧಕ್ಕಿಂತ ಹೆಚ್ಚಿನ ಹಣ ಈಗಾಗಲೇ ರೈತರ ಖಾತೆಗಳಿಗೆ ಜಮೆ ಆಗಿದೆ. ಕಳೆದ ಹಲವಾರು ವರ್ಷಗಳಿಂದ 1,400ರಿಂದ 1,600 ಕೋಟಿ ರೂ. ಅಂದಾಜಿನಲ್ಲಿ ರಾಜ್ಯಕ್ಕೆ ಬೆಳೆವಿಮೆ ಬಿಡುಗಡೆಯಾಗುತ್ತಿದೆ. ಅದೇ ರೀತಿ 2024-25ನೇ ಸಾಲಿನ ಮಂಜೂರಾತಿ ಆಗಿರುವ ಒಟ್ಟಾರೆ ಬೆಳೆ ವಿಮೆ ಪರಿಹಾರದಲ್ಲಿ ಸಿಂಹಪಾಲು ಕಲಬುರಗಿ ಹಾಗೂ ಗದಗ ಜಿಲ್ಲೆ ಪಡೆದಿರುವುದು ಗಮನಾರ್ಹ ಸಂಗತಿಯಾಗಿದೆ.

ಕಲಬುರಗಿಗೆ 3 ಪಟ್ಟು ಹೆಚ್ಚಳ
ಕಲಬುರಗಿ ಜಿಲ್ಲೆಗೆ 656 ಕೋಟಿ ರೂ., ಗದಗ ಜಿಲ್ಲೆಗೆ 242 ಕೋ.ರೂ., ಹಾವೇರಿಗೆ 95 ಕೋ. ರೂ., ವಿಜಯಪುರಕ್ಕೆ 97 ಕೋ. ರೂ., ಧಾರವಾಡಕ್ಕೆ 23 ಕೋ. ರೂ. ಬೆಳೆ ವಿಮೆ ಪರಿಹಾರ ಮಂಜೂರಾಗಿದೆ. ಗಮನಾರ್ಹ ಸಂಗತಿ ಎಂದರೆ 2023-24ನೇ ಸಾಲಿನಲ್ಲಿ ಕಲಬುರಗಿಗೆ 189 ಕೋ. ರೂ. ಹಾಗೂ ಹಾವೇರಿಗೆ 400 ಕೋ. ರೂ. ಬೆಳೆವಿಮೆ ಬಿಡುಗಡೆಯಾಗಿತ್ತು. ಗದಗ ಹಾಗೂ ಹಾವೇರಿ ಜಿಲ್ಲೆಗೆ ಸತತವಾಗಿ ಕಳೆದ ಒಂದೂವರೆ ದಶಕದಿಂದ 100 ಕೋಟಿ ರೂ.ಗೂ ಅಧಿಕ ಬೆಳೆವಿಮೆ ಬಿಡುಗಡೆಯಾಗುತ್ತಲೇ ಬರುತ್ತಿದೆ.


ಕಳೆದ ಮಾರ್ಚ್‌ನಲ್ಲೇ ಮುಂಗಾರು ಹಂಗಾಮಿನ ತೊಗರಿ, ಹೆಸರು, ಉದ್ದು, ಸೂರ್ಯಕಾಂತಿ ಸೇರಿ ಇತರ ಬೆಳೆಗಳಿಗೆ ಬೆಳೆ ವಿಮೆ ಪರಿಹಾರ ಮಂಜೂರಾಗಿದ್ದು, ಅಕಾಲಿಕ ಹಾಗೂ ಕೊರತೆ ಮಳೆಯಿಂದ ಹಾನಿಗೀಡಾದ ರೈತರಿಗೆ ಈ ಬೆಳೆ ಪರಿಹಾರ ನಿಜಕ್ಕೂ ಆಸರೆಯಾಗುವಂತೆ ಮಾಡಿದೆ. ರಾಜ್ಯದಲ್ಲಿ 1,449 ಕೋಟಿ ರೂ. ಬೆಳೆವಿಮೆ ಪರಿಹಾರ 23 ಲಕ್ಷ ರೈತರಿಗೆ ದೊರಕಲಿದೆ.

ಯಾವ ಜಿಲ್ಲೆಗೆ ಎಷ್ಟು ಪರಿಹಾರ?
ಬೆಂಗಳೂರು ಗ್ರಾಮಾಂತರ 79 ಲಕ್ಷ ರೂ., ಬೆಂಗಳೂರು ನಗರ 4 ಲಕ್ಷ ರೂ., ದಕ್ಷಿಣ ಕನ್ನಡ 2.40 ಲಕ್ಷ ರೂ., ಧಾರವಾಡ 23 ಕೋ. ರೂ., ಹಾವೇರಿ 95 ಕೋ. ರೂ., ಉತ್ತರ ಕನ್ನಡ 1 ಕೋ. ರೂ., ಚಿಕ್ಕಬಳ್ಳಾಪುರ 38 ಕೋ. ರೂ., ಕಲಬುರಗಿ 656 ಕೋ.ರೂ., ಉಡುಪಿ 3 ಲಕ್ಷ ರೂ., ಚಿಕ್ಕಮಗಳೂರು 48 ಲಕ್ಷ ರೂ., ಚಿತ್ರದುರ್ಗ 33 ಕೋ. ರೂ., ದಾವಣಗೆರೆ 44 ಕೋ. ರೂ. ಗದಗ 242 ಕೋ. ರೂ., ಹಾಸನ 26 ಕೋ. ರೂ., ಕೊಡಗು 23 ಲಕ್ಷ ರೂ., ಕೊಲಾರ 1 ಕೋ. ರೂ., ರಾಮನಗರ 2 ಕೋ. ರೂ., ಶಿವಮೊಗ್ಗ 13 ಕೋ. ರೂ., ತುಮಕೂರು 1 ಕೋ. ರೂ., ವಿಜಯನಗರ 70 ಕೋ. ರೂ., ವಿಜಯಪುರ 97 ಕೋ. ರೂ., ಬಳ್ಳಾರಿ 32 ಲಕ್ಷ ರೂ., ಕೊಪ್ಪಳ 34 ಕೋ. ರೂ., ಮೈಸೂರು 39 ಲಕ್ಷ ರೂ., ಯಾದಗಿರಿ 18 ಕೋ. ರೂ., ಬಾಗಲಕೋಟೆ 14 ಕೋ. ರೂ., ಬೆಳಗಾವಿ 24 ಕೋ. ರೂ., ಬೀದರ್ 13 ಕೋ. ರೂ., ಚಾಮರಾಜನಗರ 2 ಕೋ.ರೂ., ಮಂಡ್ಯ 3 ಕೋ. ರೂ., ರಾಯಚೂರು 3 ಕೋ. ರೂ., ಒಟ್ಟು 1,449 ಕೋ. ರೂ.

 ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Thu, 24 Jul 2025 10:23:03 +0530 shivuagrico
Bele vime&ಮಳೆಯಿಂದ ಬೆಳೆ ಹಾನಿಯಾಗಿ 72 ಗಂಟೆಯೊಳಗೆ ಈ ಕೆಲಸ ಮಾಡಿದವರಿಗೆ ಮಾತ್ರ ಜಮಾ ಆಗಲಿದೆ ಬೆಳೆವಿಮೆ https://krushirushi.in/Bele-vime-2229 https://krushirushi.in/Bele-vime-2229 Bele vime-ಮಳೆಯಿಂದ ಬೆಳೆ ಹಾನಿಯಾಗಿ 72 ಗಂಟೆಯೊಳಗೆ ಈ ಕೆಲಸ ಮಾಡಿದವರಿಗೆ ಮಾತ್ರ ಜಮಾ ಆಗಲಿದೆ ಬೆಳೆವಿಮೆ
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಉದ್ದೇಶಬೆಳೆ ವೈಫಲ್ಯದ ಆರ್ಥಿಕ ನಷ್ಟವನ್ನು ಕಡಿಮೆ ಮಾಡುವ ಮೂಲಕ, ಇದು ರೈತರ ಆದಾಯವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ. ಮತ್ತು ರೈತರು ಸ್ಥಿರವಾದ ಆದಾಯವನ್ನು ಹೊಂದಿರುವಾಗ, ಅವರು ಉತ್ತಮ ಕೃಷಿ ಪದ್ಧತಿಗಳಲ್ಲಿ ಹೂಡಿಕೆ ಮಾಡಬಹುದು, ಇದು ಹಲವಾರು ಪ್ರಯೋಜನಗಳನ್ನು ತರುತ್ತದೆ. ಬೆಳೆ ಹಾನಿ/ನಷ್ಟದ ವಿರುದ್ಧ ರೈತರಿಗೆ ಆರ್ಥಿಕ ನೆರವು ನೀಡುವುದು.
ಸ್ಧಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ (Localized calamity) ಆಲೀಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ(ಇನಂಡೇಷನ್), ಮೇಘಸ್ಪೋಟ (Cloud burst) ಮತ್ತು ಗುಡುಗು ಮಿಂಚುಗಳಿಂದಾಗಿ ಉಂಟಾಗುವ ಬೆಂಕಿ ಅವಘಡ (Natural fire due to lightning) ಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯುಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಯೋಜನೆಯಡಿ ಅವಕಾಶವಿರುತ್ತದೆ.
ಒಂದು ವೇಳೆ ಒಂದು ಅಧಿಸೂಚಿತ ಘಟಕದಲ್ಲಿ ಶೇಕಡಾ 25 ಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ಬೆಳೆ ನಷ್ಟವಾದರೆ ಅಧಿಸೂಚಿತ ಘಟಕದಲ್ಲಿ ಬೆಳೆ ವಿಮೆಗೆ ಒಳಪಟ್ಟ ರೈತರಲ್ಲಿಬೆಳೆ ನಷ್ಟವಾದ ರೈತರಿಗೆ ಮಾತ್ರ ಮಾದರಿ ಸಮೀಕ್ಷೆಗನುಗುಣವಾಗಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು.
ಇಂತಹ ಸ್ಧಳೀಯ ಗಂಡಾಂತರಗಳ ಕಾರಣದಿಂದ ಬೆಳೆ ನಷ್ಟಸಂಭವಿಸಿದರೆ, ಬೆಳೆ ವಿಮೆ ಮಾಡಿಸಿರುವ ರೈತರು ಬಗ್ಗೆನೇರವಾಗಿ ಸಂಬಂಧಪಟ್ಟ ಅನುಷ್ಠಾನಗೊಳಿಸುವ ವಿಮಾಸಂಸ್ಥೆಗಳ ಕಛೇರಿಗಳಿಗೆ ಅಥವಾ ಹಣಕಾಸು ಸಂಸ್ಧೆ ಅಥವಾ ಕೃಷಿ/ತೋಟಗಾರಿಕೆ ಇಲಾಖೆ ಮೂಲಕ ತಕ್ಷಣಸೂಚನೆ ನೀಡಬೇಕು.
ಇಂತಹ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆಕಾರಣಗಳನ್ನು 72 ಗಂಟೆಗಳೊಳಗಾಗಿ ತಿಳಿಸಬೇಕು.
ನಷ್ಟದ ಬಗೆಗಿನ ಮಾಹಿತಿಯನ್ನು ಸ್ವೀಕರಿಸಿದ ಮೇಲೆ ವಿಮಾಸಂಸ್ಥೆಗಳು ಬೆಳೆ ನಷ್ಟವನ್ನು ನಿರ್ಧರಿಸುವುದಕ್ಕೆ ನಷ್ಟನಿರ್ಧಾರಕರನ್ನು ಸಂಬಂಧಪಟ್ಟ ಪ್ರದೇಶಕ್ಕೆ 48 ಗಂಟೆಯೊಳಗಾಗಿ ನಿಯೋಜಿಸುವುದು.
ವಿಮೆ ಸಂಸ್ಥೆಯಿಂದ ನೇಮಿಸಲ್ಪಟ್ಟ ನಷ್ಟ ನಿರ್ಧಾರಕರುಮತ್ತು ಸ್ಥಳೀಯ ತಾಲ್ಲೂಕು/ಹೋಬಳಿ ಮಟ್ಟದ ಕೃಷಿ ಮತ್ತುತೋಟಗಾರಿಕಾ ಇಲಾಖಾ ಅಧಿಕಾರಿಗಳು ಜಂಟಿಯಾಗಿ, ಹಾನಿಗೊಳಗಾದ ರೈತರ ಸಮ್ಮುಖದಲ್ಲಿ ಬೆಳೆ ನಷ್ಟನಿರ್ಧರಿಸಲಾಗುವುದು.
ಸದರಿ ಬೆಳೆ ನಷ್ಟದ ವರದಿಯನ್ನು ಜಿಲ್ಲೆಗಳ ಇಲಾಖಾಮುಖ್ಯಸ್ಥರು ಅನುಷ್ಟಾನ ವಿಮಾ ಸಂಸ್ಥೆಗಳಿಗೆ ನೇರವಾಗಿಸಲ್ಲಿಸಲು ಕ್ರಮ ಕೈಗೊಳ್ಳುವುದು.
1. Post Harvest Losses
ಯೋಜನೆಯಡಿ ಬೆಳೆ ಕಟಾವಿನ ನಂತರ ಬೆಳೆಯನ್ನುಜಮೀನಿನಲ್ಲೆ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ (Post Harvest Losses) ಕಟಾವು ಮಾಡಿದ ಎರಡುವಾರಗಳೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕಮಳೆಯಿಂದಾಗಿ ಬೆಳೆ ನಾಶವಾದರೆ ವೈಯುಕ್ತಿಕವಾಗಿ(Case to Case basis) ವಿಮಾ ಸಂಸ್ಧೆಯು ನಷ್ಟ ನಿರ್ಧಾರ ಮಾಡಿಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಒಳಪಡಿಸಲಾಗಿದೆ.
ಬೆಳೆ ವಿಮೆ ಮಾಡಿಸಿದ ರೈತರು ಯಾರಿಗೆ ಸಂಪರ್ಕಿಸಬೇಕು?

ಬೆಳೆ ವಿಮೆ ಮಾಡಿಸಿದ ರೈತರು ಯಾವ ವಿಮಾ ಕಂಪನಿಗೆ ಹಣ ಪಾವತಿಸಿದ್ದಾರೋ ಆ ವಿಮಾ ಕಂಪನಿಗೆ ಸಂಪರ್ಕಿಸಬೇಕು. ಒಂದು ವೇಳೆ ವಿಮಾ ಕಂಪನಿಯ ನಂಬರ್‌ ಗೊತ್ತಿಲ್ಲದಿದ್ದರೆ ಬೆಳೆ ವಿಮೆ ಉಚಿತ ಸಹಾಯವಾಣಿ 1800 180 1551 ನಂಬರಿಗೆ ಕರೆ ಮಾಡಿ ನಿಮ್ಮ ಜಿಲ್ಲೆ ವಿಮಾ ಕಂಪನಿಯ ನಂಬ‌ರ್ ಪಡೆದು ಕರೆ ಮಾಡಬೇಕು.

ಬೆಳೆ ವಿಮೆ ಹಣ ಎಷ್ಟು ಜಮೆಯಾಗುತ್ತದೆ?

ಬೆಳೆ ವಿಮೆ ಮಾಡಿಸಿದ ನಂತರ ಬೆಳೆ ಎಷ್ಟು ಪ್ರಮಾಣದಲ್ಲಿ ಹಾಳಾಗಿದೆ ಹಾಗೂ ಬೆಳೆ ಯಾವ ಹಂತದಲ್ಲಿ ಹಾಳಾಗಿದೆ ಎಂಬುದನ್ನು ನಿರ್ಧರಿಸಿ ರೈತರಿಗೆ ವಿಮೆ ಹಣ ಪಾವತಿಸಲಾಗುವುದು.

Bele vime-ಇನ್ನು ಮುಂದೆ ವಾರದೊಳಗೆ ಬೆಳೆ ವಿಮೆ ಪರಿಹಾರ-ಕೃಷಿ ಸಚಿವ ಚೆಲುವರಾಯಸ್ವಾಮಿ

ವಾರದಲ್ಲಿ ವಿಮೆ ಹಣ ಜಮಾ: 'ಬೆಳೆ ವಿಮೆ' 
ಪರಿಹಾರ ಮೊತ್ತ ವಿಳಂಬವಾಗುತ್ತಿರುವುದಕ್ಕೆ ಹೆಚ್ಚಿನ ಕರೆಗಳ ಬಂದವು. ರಾಣೆಬೆನ್ನೂರು ತಾಲೂಕಿನ ಜೋಯಿಸರ ಹಳ್ಳಿಯ ಶಂಕರಪ್ಪ ರಾಮಪ್ಪ, ಕಲಬುರಗಿಯ ಬಾಬು ಸಾಬ್ ಪಾಟೀಲ್, ಶಿರಾ ತಾಲೂಕಿನ ತಿಮ್ಮರಾಜು, ವಿಜಯಪುರದ ಹನುಮಂತ, ರಾಯಚೂರು ಮಾನ್ವಿ ತಾಲೂಕಿನ ಮಿರಾಜುದ್ದೀನ್, ಗೌರಿಬಿದನೂರು ತಾಲೂಕಿನ ಸತೀಶ್ ಸೇರಿದಂತೆ ಇನ್ನೂ ಕೆಲವರು ಪ್ರಸ್ತಾಪಿಸಿದ ಬೆಳೆ ವಿಮೆ ಸೂಕ್ತ ಸಮಯಕ್ಕೆ ಬಾರದಿರುವ ವಿಚಾರಕ್ಕೆ ಸಚಿವರು ಸ್ಪಂದಿಸಿದರು. 



"ಸಮೀಕ್ಷೆ ನಡೆಸಿ ಬೆಳೆ ಹಾನಿಯಾಗಿರುವುದು ಖಾತರಿಯಾಗಷ್ಟೇ ಬೆಳೆ ವಿಮೆ ಪರಿಹಾರ ನೀಡಲಾಗುತ್ತದೆ. ಈಗಾಗಲೇ ಬೆಳೆ ವಿಮೆ ಹಣ ರೈತರ ಖಾತೆಗೆ ಜಮೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕಳೆದ ವರ್ಷದ ಬೆಳೆ ವಿಮೆ ಪರಿಹಾರ ವಾರರೊಳಗೆ ರೈತರ ಖಾತೆಗೆ ಜಮೆಯಾಗಲಿದೆ. ಕಲಬುರಗಿಯಲ್ಲಿ ಕಳೆದ ಅಕ್ಟೋಬ‌ರ್-ನವೆಂಬರ್ ನಲ್ಲಿ ಆದ ಬೆಳೆಹಾನಿಗೆ 600 ಕೋಟಿ ಪರಿಹಾರ ನೀಡಲಾಗಿದೆ ಎಂದು ಹೇಳಿದರು.

 ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Sat, 19 Jul 2025 09:36:38 +0530 shivuagrico
ಈ ಪಟ್ಟಿಯಲ್ಲಿರುವವರಿಗೆ ಇಂದು ಪಿಎಂ ಕಿಸಾನ್ 20 ನೇ ಕಂತು ಬಿಡುಗಡೆ&Pmkisan 20th instalment released today https://krushirushi.in/Pmkisan-20th-instalment-released-today-2226 https://krushirushi.in/Pmkisan-20th-instalment-released-today-2226 ಈ ಪಟ್ಟಿಯಲ್ಲಿರುವವರಿಗೆ ಇಂದು ಪಿಎಂ ಕಿಸಾನ್ 20 ನೇ ಕಂತು ಬಿಡುಗಡೆ-Pmkisan 20th instalment released today

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬ‌ರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 20ನೇ ಕಂತು ಇದೇ ಜುಲೈ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಬಿಹಾರದ ಈಸ್ಟ್ ಚಂಪಾರನ್‌ನ ಮೋತಿಹರಿ ಎಂಬಲ್ಲಿ ಇಂದು ಬೃಹತ್‌ ಸಾರ್ವಜನಿಕ ಸಮಾವೇಶ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಈ ವೇಳೆ ಅವರು 20ನೇ ಕಂತಿನ ಹಣ ಬಿಡುಗಡೆ ಮಾಡಬಹುದು ಎಂದು ಝೀ ನ್ಯೂಸ್ ವರದಿ ಮಾಡಿದೆ.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 20ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 20th instalment date

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Fri, 18 Jul 2025 08:03:10 +0530 shivuagrico
Cremation machine&ಎಂತಾ ಕಾಲ ಬಂತಪ್ಪಾ,ಬುಕ್ ಮಾಡಿದರೆ ಮನೆಗೆ ಬಂದು ಹೆಣ ಸುಟ್ಟು ಬೂದಿ ಮಾಡಿಕೊಡುವ ಮಶೀನ್ https://krushirushi.in/Cremation-machine-2225 https://krushirushi.in/Cremation-machine-2225 Cremation machine-ಎಂತಾ ಕಾಲ ಬಂತಪ್ಪಾ,ಬುಕ್ ಮಾಡಿದರೆ ಮನೆಗೆ ಬಂದು ಹೆಣ ಸುಟ್ಟು ಬೂದಿ ಮಾಡಿಕೊಡುವ ಮಶೀನ್


ಇದು ಡಿಜಿಟಲ್ ಯುಗ.

ಕೈಯಿ ಮೊಬೈಲ್ ಒಂದಿದ್ದರೆ ಸಾಕು. ಏನು ಬೇಕಾದರೂ ಮಾಡಬಹುದು. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇನ್ನೂ ಡಿಜಿಟಲ್‌ಗೆ ಅಷ್ಟಾಗಿ ತೆರೆದುಕೊಂಡಿಲ್ಲ. ಅಲ್ಲಿ ಡಿಜಿಟಲ್ ಅಂದರೆ, ಮೊಬೈಲ್‌ನಿಂದ ಹಣವನ್ನು ಸ್ಕ್ಯಾನ್ ಅಥವಾ ನಂಬ‌ರ್ ಹಾಕಿ ಕಳಿಸೋದು ಅನ್ನೋದರಲ್ಲೇ ಇದ್ದಾರೆ.
ಆದರೆ, ಬೆಂಗಳೂರು ಈ ವಿಚಾರದಲ್ಲಿ ಬಹಳ ಮುಂದೆ ಹೋಗಿದೆ.
ಫುಡ್ ಅಂದ್ರೆ ಸ್ವಿಗ್ಗಿ, ಜೋಮೋಟೋ, ಆಟೋ-ಟ್ಯಾಕ್ಸಿ ಅಂದ್ರೆ ಓಲಾ, ಉಬರ್, ರಾಪಿಡೋ ಮಾತ್ರವೇ ಕಾಣುತ್ತಿದ್ದವು. ಈಗ ಮನೆಯಲ್ಲಿ ನಾಯಿ ನೋಡಿಕೊಳ್ಳೋಕು ಅಪ್ಲಿಕೇಶನ್‌ಗಳು ಬಂದಿವೆ. ಅದರೊಂದಿಗೆ ಮನೆಯ ದಿನಸಿ, ಲಾಂಡ್ರಿ ಇವಕ್ಕೆಲ್ಲವೂ ಬೇರೆ ಬೇರೆಯಾದ ಅಪ್ಲಿಕೇಶನ್‌ಗಳಿವೆ. ಆದರೆ, ತಂತ್ರಜ್ಞಾನ ಯುಗದಲ್ಲೂ ಕೆಲವೊಂದನ್ನ ಅಪ್ಲಿಕೇಶನ್‌ಗಳಲ್ಲಿ ಬುಕ್ ಮಾಡಿ ಮಾಡಲು ಸಾಧ್ಯವೇ ಇಲ್ಲ ಅನ್ನೋ ವಿಚಾರಗಳಿದ್ದವು. ಯಾರಾದರೂ ಸತ್ತಾಗ ಅವರ ಹೆಣವನ್ನು ಸ್ಮಶಾನಕ್ಕೆ ತೆಗೆದುಕೊಂಡು ಹೋಗಿ ಮಣು ಮಾಡಬೇಕು ಅನ್ನೋದು ಇಲಿಯವರೆಗೂ ಯೋಚನೆ ಮಾಡುತ್ತಿದ್ದೆವು.


ಆದರ, ಈಗ ಅದಕ್ಕೂ ಅಪ್ಲಿಕೇಶನ್ ಬಂದಿದೆ. ಇದರೊಂದಿಗೆ ಮನೆಯಿಂದ ನೀವು ಯಾವುದಕ್ಕೂ ಆಚೆ ಹೋಗುವ ಪ್ರಮೇಯವೇ ಇಲ್ಲ. ಹಾಗೇನಾದರೂ ನಿಮ್ಮ ಮನೆಯಲ್ಲಿ ಯಾರಾದರೂ ಸಾವು ಕಂಡಿದ್ದರೆ. ಹೆಣ ಸುಟ್ಟು ಬೂದಿ ಮಾಡಿಕೊಡುವ ಅಪ್ಲಿಕೇಶನ್ ಬಂದಿದೆ. ತಂತ್ರಜ್ಞಾನ ಎಲ್ಲಿಗೆ ಬಂದು ನಿಂತಿದೆ ಎಂದರೆ ನೀವು ಸತ್ತರೆ ಸ್ಮಶಾನಕ್ಕೂ ಹೋಗಬೇಕಾಗಿಲ್ಲ. ನಿಮ್ಮ ಮನೆ ಬಾಗಿಲಲ್ಲೆ ಹೆಣ ಸುಟ್ಟು ಬೂದಿ ಪ್ಯಾಕ್ ಮಾಡಿಕೊಡುವ ವ್ಯವಸ್ಥೆ ಬಂದಿದೆ.

ಅಪ್ಲಿಕೇಶನ್ ಅಥವಾ ಮೊಬೈಲ್ ಮೂಲಕ ಹೆಣ ಸುಡುವವರಿಗೆ ಫೋನ್ ಮಾಡಿದರೆ, ಅವರ ಸಣ್ಣ ಲಗೇಜ್ ಗಾಡಿಯಲ್ಲಿ ಮಶಿನ್ ತೆಗೆದುಕೊಂಡು ಮನೆಗೆ ಬರುತ್ತಾರೆ. ಮನೆಯಲ್ಲಿಯೇ ಮೃತ ದೇಹದ ಅಂತಿಮ ವಿಧಿವಿಧಾನಗಳನ್ನು ಮಾಡುವ ಅವಕಾಶ ಮಾಡಿಕೊಡುತ್ತಾರೆ. ಅವರವರ ಸಂಪ್ರದಾಯದಂತೆ ವಿಧಿ ವಿಧಾನ ಮಾಡಿದ ಬಳಿಕ ಒಂದು ಟ್ರೇಯಲ್ಲಿ ಮೃತದೇಹವನ್ನು ಇಟ್ಟು, ಕ್ಯೂಬ್ ರೀತಿಯಲ್ಲಿ ಇರುವ ಬರ್ನ‌್ರನ ಒಳಗೆ ಹಾಕುತ್ತಾರೆ. ಕೆಲವು ಗಂಟೆಗಳ ದಹನ ಪ್ರಕ್ರಿಯೆ ಬಳಿಕ ಒಂದು ಮಡಿಕೆಯಲ್ಲಿ ಬೂದಿಯನ್ನು ಸಂಗ್ರಹ ಮಾಡಿ ಅದನ್ನು ಮನೆಯವರಿಗೆ ನೀಡುತ್ತಾರೆ.


ಈ ವಿಡಿಯೋವಿಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಕೋವಿಡ್-19 ಟೈಮ್‌ನಲ್ಲಿ ಇಂಥ ವ್ಯವಸ್ಥೆಯನ್ನು ಮೊದಲ ಬಾರಿಗೆ ಪರಿಚಯ ಮಾಡಲಾಗಿತ್ತು. ಮನೆಯಲ್ಲೇ ಇರುವ ಸಿಲಿಂಡರ್‌ಗಳನ್ನು ಬಳಸಿ ಮೃತದೇಹವನ್ನು ಮನೆ ಬಾಗಿಲಲ್ಲೇ ಅಂತ್ಯಸಂಸ್ಕಾರ ಮಾಡುವ ವ್ಯವಸ್ಥೆಯನ್ನು ಪರಿಚಯಿಸಲಾಗಿತ್ತು. ಈಗ ಇದು ಮತ್ತಷ್ಟು ವ್ಯಾಪಕವಾಗುವ ಲಕ್ಷಣ ಕಾಣುತ್ತಿದೆ.

ಈ ವಿಡಿಯೋಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಕಾಮೆಂಟ್‌ಗಳು ಬರುತ್ತಿವೆ. 'ನನಗೆ ಯಾರು ಇಲ್ಲ ನಾನು ಸತ್ತರೆ ಹೆಂಗೆ ಅಂತಿದ್ದೆ. ನಾನು ಸತ್ರೆ ನನ್ ಮನೆನಲ್ಲೇ ಬೂದಿ ಮಾಡಿ ಕೊಡೋ ಮಿಷಿನ್ ಬಂತು' ಎಂದು ಒಬ್ಬ ಯೂಸ‌ರ್ ಬರೆದಿದ್ದರೆ. 'ಯಪ್ಪಾ ಇನ್ನು ಏನೇನ್ ಬರುತ್ತೋ' 'ಏನು ಕಾಲ ಬಂತು ಗುರು ಲೇ..' ಎಂದು ಕೆಲವು ಯೂಸರ್‌ಗಳು ಅಚ್ಚರಿ ಪಟ್ಟಿದ್ದಾರೆ.
'ಇಂಥ ಮಶಿನ್‌ಗಳು ಒಳ್ಳೆಯದು. ಸ್ಮಶಾನದ ಜಾಗ ಉಳಿಯುತ್ತಿದೆ. ಮೃತ ದೇಹವನ್ನು ಸುಡೋದರಿಂದ ಯಾವುದೇ ಕಾಯಿಲೆ ಕೂಡ ಪ್ರಸಾರವಾಗೋದಿಲ್ಲ' ಎಂದು ಮತ್ತೊಬ್ಬರು ಬರೆದಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೋ ನೋಡಿ

https://www.instagram.com/reel/DMIfLIGPdAc/?utm_source=ig_web_button_share_sheet

]]>
Thu, 17 Jul 2025 19:02:24 +0530 shivuagrico
Krishimela&2025&ಕೃಷಿಮೇಳ 2025 ದಿನಾಂಕ ಪ್ರಕಟ,ಈ ವರ್ಷದ ವಿಶೇಷತೆಗಳೇನಿರಲಿದೆ? https://krushirushi.in/Krishimela-2025 https://krushirushi.in/Krishimela-2025 Krishimela-2025-ಕೃಷಿಮೇಳ 2025 ದಿನಾಂಕ ಪ್ರಕಟ,ಈ ವರ್ಷದ ವಿಶೇಷತೆಗಳೇನಿರಲಿದೆ?


ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನವೆಂಬರ್‌ 13ರಿಂದ 16ರವರೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ‘ಸಮೃದ್ಧ ಕೃಷಿ ವಿಕಸಿತ ಭಾರತ– ನೆಲ, ಜಲ, ಬೆಳೆ’ ಎಂಬ ಘೋಷವಾಕ್ಯದಡಿ ಕೃಷಿ ಮೇಳ ನಡೆಯಲಿದೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ ತಿಳಿಸಿದ್ದಾರೆ

ಅತ್ಯಮೂಲ್ಯ ನೈಸರ್ಗಿಕ ಸಂಪನ್ಮೂಲಗಳಾದ ನೆಲ, ಜಲ ಹಾಗೂ ಜೀವ ವೈವಿಧ್ಯದ ಮೇಲೆ ನಮ್ಮ ದೇಶ ಅವಲಂಬಿತವಾಗಿದೆ. ಇವುಗಳನ್ನು ವೈಜ್ಞಾನಿಕವಾಗಿ ಜವಾಬ್ದಾರಿಯುತವಾಗಿ ಬಳಸಿ, ಸಂರಕ್ಷಿಸುವ ಮೂಲಕ ಸುಸ್ಥಿರ ಕೃಷಿ ಹಾಗೂ ಕೃಷಿಕರ ಆದಾಯವೃದ್ಧಿ ಮಾಡುವುದು ಈ ಮೇಳದ ಉದ್ದೇಶವಾಗಿದೆ. ವಿಕಸಿತ ಭಾರತದ ಪ‍ರಿಕಲ್ಪನೆಗೆ ಕೃಷಿ ಕ್ಷೇತ್ರದ ಕೊಡುಗೆಯನ್ನು ಪ್ರತಿಪಾದಿಸುವ ವಿಶೇಷ ವೇದಿಕೆಯನ್ನು ಈ ಮೇಳ ಕಲ್ಪಿಸಲಿದೆ’ ಎಂದು ಅವರು ಹೇಳಿದ್ದಾರೆ. 

‘ಭವಿಷ್ಯದ ಸಮೃದ್ಧ ಕೃಷಿಯಿಂದ ಮಾತ್ರ ವಿಕಸಿತ ಭಾರತ ನಿರ್ಮಾಣ ಸಾಧ್ಯ. ಇದಕ್ಕೆ ಪೂರಕವಾಗಿ ಅಗತ್ಯ ತಂತ್ರಜ್ಞಾನಗಳ ಪ್ರದರ್ಶನ ಹಾಗೂ ಮಾಹಿತಿ ಪೂರೈಕೆಗೆ ಕೃಷಿಮೇಳ ವೇದಿಕೆ ಒದಗಿಸಲಿದೆ. ಇದರ ಜೊತೆಗೆ ಕೃಷಿಕರ ಸಾಂಪ್ರದಾಯಿಕ ಮೂಲಗಳ ಹೊರತಾಗಿ ಹೊಸ ಆದಾಯ ಗಳಿಕೆಯ ಹಾದಿಗಳನ್ನು ಸೃಷ್ಟಿಸಲಾಗುತ್ತದೆ. ಕೃಷಿ ಬಗ್ಗೆ ಸಾರ್ವಜನಿಕರಲ್ಲಿ ಆಸಕ್ತಿ ಮೂಡಿಸಲು ಕೃಷಿ ಪ್ರವಾಸೋದ್ಯಮವನ್ನು ಒಂದು ಉದ್ದಿಮೆಯಾಗಿ ಪರಿಚಯಿಸುವ ಪ್ರಯತ್ನಕ್ಕೆ ಈ ಮೇಳ ಸಾಕ್ಷಿಯಾಗಲಿದೆ. ಮೇಳದಲ್ಲಿ ಬೃಹತ್ ವಸ್ತು ಪ್ರದರ್ಶನ, ಬೆಳೆ ಪ್ರಾತ್ಯಕ್ಷಿಕೆಗಳು, ಸಂವಾದ, ಪ್ರಶಸ್ತಿ ಪ್ರದಾನ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

]]>
Thu, 17 Jul 2025 10:15:33 +0530 shivuagrico
ಶೇಂಗಾ ತೆಂಗಿನಕಾಯಿ ಬೆಳೆಯುವ ರೈತರೇ PMFME ಯೋಜನೆಯಡಿ 15 ಲಕ್ಷ ಸಬ್ಸಿಡಿಯೊಂದಿಗೆ ಎಣ್ಣೆಗಾಣ ಮಾಡಿ ಯಶಸ್ವಿ https://krushirushi.in/PMFME-yojane https://krushirushi.in/PMFME-yojane PMFME ಯೋಜನೆಯಡಿ ರೊಟ್ಟಿ ಮಶೀನ್,ಹಿಟ್ಟಿನ ಗಿರಣೆ,ಎಣ್ಣಿ ಗಾಣ,ಬೆಲ್ಲದ ಗಾಣ,ಖಾರದ ಪುಡಿ,ಶಾವಿಗೆ,ಬೇಕರಿ,ಕುರಿ,ಕೋಳಿ ಫುಡ್ ತಯಾರಿಕೆಗೆ 15 ಲಕ್ಷ ಸಬ್ಸಿಡಿ-PMFME subsidy scheme

ಕರ್ನಾಟಕದಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗಾಗಿ PMFME ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸುವ ಸಭೆಯನ್ನು ಇಂದು ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಯಿತು.

ಈ ಯೋಜನೆ ಅಡಿಯಲ್ಲಿ ಸಿರಿಧಾನ್ಯಗಳು, ಬೆಲ್ಲ, ಬೇಕರಿ ಉತ್ಪನ್ನಗಳು ಸೇರಿದಂತೆ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಶೇ. 50 ಅಥವಾ ಗರಿಷ್ಠ ₹15 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತಿದೆ. ಇದರಲ್ಲಿ ಕೇಂದ್ರದ ₹6 ಲಕ್ಷ ಮತ್ತು ರಾಜ್ಯದ ₹9 ಲಕ್ಷ ಪಾಲು ಸೇರಿದ್ದು, ವೈಯಕ್ತಿಕ ಉದ್ದಿಮೆದಾರರು, ಗುಂಪುಗಳು ಮತ್ತು ಸ್ವಸಹಾಯ ಸಂಘಗಳಿಗೆ ಇದು ವರದಾನವಾಗಿದೆ. ಸ್ವಸಹಾಯ ಸಂಘಗಳ ಸದಸ್ಯರಿಗೆ ₹40,000 ವರೆಗೆ ಬೀಜ ಬಂಡವಾಳ ಮತ್ತು ಸಂಘಗಳಿಗೆ ₹4 ಲಕ್ಷದ ವರೆಗೆ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ.

ಕೃಷಿಕರನ್ನು ಉದ್ಯಮಿಗಳನ್ನಾಗಿ ಪರಿವರ್ತಿಸುವ ಗುರಿ ಹೊಂದಿರುವ ಕೆಪೆಕ್, ಈ ಯೋಜನೆಯಡಿ ಕರ್ನಾಟಕದಲ್ಲಿ 11,910 ಉದ್ಯಮಗಳನ್ನು ಸ್ಥಾಪಿಸಲು/ಉನ್ನತೀಕರಿಸಲು ₹493 ಕೋಟಿ ಅನುದಾನ ಮೀಸಲಿಟ್ಟಿದೆ. ಇದು ವೈಯಕ್ತಿಕ ಉದ್ಯಮಿಗಳಿಗೆ 35% (60:40) ಸಬ್ಸಿಡಿ ಜೊತೆಗೆ ಕರ್ನಾಟಕ ಸರ್ಕಾರದಿಂದ 15% ಹೆಚ್ಚುವರಿ ಟಾಪ್-ಅಪ್ ಸಬ್ಸಿಡಿ ನೀಡುತ್ತದೆ.

ಈಗಾಗಲೇ 6,585 ಅರ್ಜಿಗಳಿಗೆ ಸಾಲ ಮಂಜೂರಾಗಿದ್ದು, ₹756.48 ಕೋಟಿ ಬಂಡವಾಳ ಹೂಡಿಕೆಯಾಗಿದೆ. 4,489 ಫಲಾನುಭವಿಗಳಿಗೆ ₹162.50 ಕೋಟಿ ಸಹಾಯಧನ ಹಾಗೂ 3,770 ಫಲಾನುಭವಿಗಳಿಗೆ ₹59.48 ಕೋಟಿ ಹೆಚ್ಚುವರಿ ಸಹಾಯಧನ ಬಿಡುಗಡೆ ಮಾಡಲಾಗಿದೆ. ಜೊತೆಗೆ, 5 ಬ್ರ್ಯಾಂಡಿಂಗ್ ಮಾರ್ಕೆಟಿಂಗ್ ಪ್ರಸ್ತಾವನೆಗಳು, 4 ಸಾಮಾನ್ಯ ಮೂಲಭೂತ ಸೌಕರ್ಯ ಘಟಕಗಳು ಮತ್ತು 14 ಇನ್ಕ್ಯುಬೇಷನ್ ಕೇಂದ್ರಗಳನ್ನು ಸ್ಥಾಪಿಸಿ, ರಾಜ್ಯದಲ್ಲಿ ಆಹಾರ ಸಂಸ್ಕರಣಾ ವಲಯದ ಬೆಳವಣಿಗೆಗೆ ಆದ್ಯತೆ ನೀಡಲಾಗುತ್ತಿದೆ.

#PMFME #FoodProcessing #Agriculture #Empowerment #KEPEC #Farmers #SelfHelpGroups

ಪಿಎಂಎಫ್ಎಮ್ ಇ ಯೋಜನೆಯಡಿ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಅರ್ಜಿ ಆಹ್ವಾನ-pmfme subsidy scheme 

ಯಾವ ಯಾವ ಉದ್ಯಮ ಮಾಡಬಹುದು?
 ರೊಟ್ಟಿ ಮಾಡುವ ಯಂತ್ರ, ಎಣ್ಣೆಗಾಣ, ಬೆಲ್ಲದ ಗಾಣ, ಕಾರದಪುಡಿ ಘಟಕ, ಶಾವಿಗೆ, ಹಪ್ಪಳ-ಸಂಡಿಗೆ, ಹಿಟ್ಟಿನ ಗಿರಣಿ, ಬೇಕರಿ ಉತ್ಪನ್ನ, ಹಾಲಿನ ಉತ್ಪನ್ನ, ಉಪ್ಪಿನಕಾಯಿ ಸೇರಿದಂತೆ ಕಿರು ಆಹಾರ ಸಂಸ್ಕರಣೆ

 ಅರ್ಜಿ ಸಲ್ಲಿಸುವುದು ಹೇಗೆ?
 ಅರ್ಜಿ ಸಲ್ಲಿಸುವವರು http://mofpi.nic.in/pmfme/ ಪೋರ್ಟಲ್ ನಲ್ಲಿ ವಿವರಗಳನ್ನು ಭರ್ತಿ ಮಾಡಬೇಕು ಅಥವಾ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಮೂಲಕ ಕೂಡ ಅರ್ಜಿ ವಿವರಗಳನ್ನು ಭರ್ತಿ ಮಾಡಿಸಬಹುದು. ಜಿಲ್ಲಾ ಮಟ್ಟದಲ್ಲಿ ನೇಮಿಸಲ್ಪಟ್ಟ ಸಂಪನ್ಮೂಲ ವ್ಯಕ್ತಿಗಳು(District resource person) ಅರ್ಜಿ ಹಾಗೂ ಯೋಜನಾ ವರದಿ(Detail project report) ಪರಿಶೀಲಿಸಿ ಜಿಲ್ಲಾ ಮಟ್ಟದ ಸಮಿತಿಗೆ ಸಲ್ಲಿಸುತ್ತಾರೆ. ಸಮಿತಿ ಅಧ್ಯಕ್ಷರು ಜಂಟಿ ಕೃಷಿ ನಿರ್ದೇಶಕ ರಾಗಿದ್ದು, ಸದರಿ ಅರ್ಜಿಗಳನ್ನು ಸಮಿತಿಯಲ್ಲಿಟ್ಟು ಅರ್ಹ ಫಲಾನುಭವಿಗಳ ಆಯ್ಕೆ ಮಾಡಿಕೊಂಡು, ಬ್ಯಾಂಕ್ಗಳಿಗೆ ಸಾಲ ಮಂಜೂರಾತಿಗಾಗಿ ಕಳುಹಿಸುತ್ತಾರೆ. ಸಂಸ್ಥೆಗಳ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಸಮಿತಿಯು ನೋಡಲ ಏಜೆನ್ಸಿಗೆ ವರ್ಗಾಯಿಸುತ್ತದೆ ಹಾಗೂ ಅರ್ಜಿದಾರರಿಗೆ ಮಾಹಿತಿ ನೀಡಲು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸಹಕರಿಸುತ್ತಾರೆ. ಒಂದು ವೇಳೆ ಅರ್ಜಿಗಳು ಸಂಸ್ಥೆಗಳಿಂದ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಮಟ್ಟದ ಸಮಿತಿ ವರದಿ ಸಲ್ಲಿಸುತ್ತದೆ.ರಾಜ್ಯ ಮಟ್ಟದ ಸಮಿತಿಗೆ ಸಲ್ಲಿಸುತ್ತದೆ. 15 ಲಕ್ಷಕ್ಕೂ ಹೆಚ್ಚು ಸಹಾಯಧನ ಬೇಕಾಗಿದ್ದಲ್ಲಿ ಸದರಿ ಅರ್ಜಿಗಳನ್ನು ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ಯಮಗಳ ಮಂತ್ರಾಲಯಕ್ಕೆ ಅನುಮೋದನೆಗಾಗಿ ಕಳುಹಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್(Aadhar card)
ಪ್ಯಾನ್ ಕಾರ್ಡ್(Pan card)
ಬ್ಯಾಂಕ್ ಪಾಸಬುಕ್(Bank passbook)

PMFME-ಕಿರು ಆಹಾರ ಉದ್ಯಮ ಸ್ಥಾಪನೆಗೆ 50% ಸಬ್ಸಿಡಿ,ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ಜಿಲ್ಲೆಗಳ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ (DRP contact number) ಸಂಪರ್ಕ ಸಂಖ್ಯೆ ತಿಳಿಯಲು ಈ ಕೆಳಗಿನ pdf download ಮಾಡಿಕೊಳ್ಳಿ
]]>
Wed, 16 Jul 2025 18:40:46 +0530 shivuagrico
Rain alert&ವಾಯುಭಾರ ಕುಸಿತ,ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಸುರಿಯಲಿದೆ ಮಳೆ https://krushirushi.in/Rain-alert https://krushirushi.in/Rain-alert Rain alert-ವಾಯುಭಾರ ಕುಸಿತ,ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ  ಸುರಿಯಲಿದೆ ಮಳೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 21 ರಿಂದ 24ರ ವರೆಗೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ


ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 21ರಂದು ಆರೆಂಜ್ ಅಲರ್ಟ್ ನೀಡಲಾಗಿದ್ದು, ಬೆಳಗಾವಿ, ಬೀದ‌ರ್, ಧಾರವಾಡ, ಕಲಬುರಗಿ, ಕೊಪ್ಪಳ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.


ಜುಲೈ 22ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ಕೊಪ್ಪಳ, ಕಲಬುರಗಿ, ರಾಯಚೂರು, ಬೀದರ್, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜುಲೈ 23ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಕೊಡಗು, ಹಾಸನ, ಮೈಸೂರು, ತುಮಕೂರು, ಶಿವಮೊಗ್ಗ ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಕರಾವಳಿ ತೀರ ತಾಲೂಕುಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮತ್ತೂ ಸ್ವಲ್ಪ ಕಡಿಮೆ ಇರಬಹುದು.

ಈಗಿನಂತೆ ಜುಲೈ 22ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ ಜುಲೈ 28ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಜುಲೈ 29ರಿಂದ ದಿನದಲ್ಲಿ ಒಂದೆರಡು ಮಳೆ ಮಾತ್ರ ಇರಬಹುದು.

ಮಲೆನಾಡು : ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ತಲಕಾವೇರಿ, ಭಾಗಮಂಡಲ ಸುತ್ತಮುತ್ತ ಭಾಗಗಳಲ್ಲಿ ಮಳೆ ಹೆಚ್ಚೇ ಇರಬಹುದು.
ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಜುಲೈ 22ರಿಂದ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ,ದಾವಣಗೆರೆ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದ್ದು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 28ರ ತನಕವೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ ತನಕ ಬಂದು ತಿರುಗಿ ಬಂಗಾಳಕೊಲ್ಲಿಯ ಕಡೆಗೆ ಸಾಗುತ್ತಿದೆ. ಇದರ ಪರಿಣಾಮದಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು.

]]>
Wed, 16 Jul 2025 07:34:43 +0530 shivuagrico
Mullu sajje&ಮುಳ್ಳುಸಜ್ಜೆ ಕಳೆ ನಿವಾರಣೆಗೆ ಬಂತು ಕಳೆನಾಶಕ ಔಷಧಿ https://krushirushi.in/Mullu-sajje-2221 https://krushirushi.in/Mullu-sajje-2221 Mullu sajje-ಮುಳ್ಳುಸಜ್ಜೆ ಕಳೆ ನಿವಾರಣೆಗೆ ಬಂತು ಕಳೆನಾಶಕ ಔಷಧಿ


ಮೆಕ್ಕೆಜೋಳ ಬೆಳೆಗಳಲ್ಲಿ ಬೆಂಬಿಡದೆ ಭೂತದಂತೆ ಕಾಡುತ್ತಿದ್ದ ಮುಳ್ಳುಸಜ್ಜೆ ಕಳೆ ನಿವಾರಣೆಗೆ ಕೊನೆಗೂ ಪರಿಹಾರ ದೊರೆತಿದೆ ಎಂದು ಚನ್ನಗಿರಿ ತಾಲೂಕು ಕತ್ತಲಗೆರೆ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ವಿಸ್ತರಣಾ ಮುಂದಾಳು ಡಾ.ಗಂಗಪ್ಪಗೌಡ ಎಸ್‌.ಬಿರಾದಾರ ತಿಳಿಸಿದರು.
ಶನಿವಾರ ದಾವಣಗೆರೆ ತಾಲೂಕಿನ ಗೋಣಿ ವಾಡ ಗ್ರಾಮದ ರೈತರೊಬ್ಬರ ಮೆಕ್ಕೆಜೋಳದ ಜಮೀನಿಗೆ ಭೇಟಿ ನೀಡಿ ಪ್ರಾತ್ಯಕ್ಷಿಕೆ ನಡೆಸಿ, ಮಾತನಾಡಿದರು.


'ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ವಿಜ್ಞಾನಗಳ ವಿಶ್ವವಿದ್ಯಾಲಯವು ಕೆಲ ವರ್ಷಗಳಿಂದ ನಡೆಸಿದ ಸಂಶೋಧನೆಯ ಹಂತದಲ್ಲಿಯೇ ಫಲ ನೀಡಿದೆ. ಕತ್ತಲಗೆರೆ ಕೃಷಿ ಮತ್ತು ತೋಟಗಾರಿಕಾ ಸಂಶೋ ಧನಾ ಕೇಂದ್ರದ ಕೃಷಿ ವಿಜ್ಞಾನಿಗಳು ಹೊನ್ನಾಳಿ, ಚನ್ನಗಿರಿ, ದಾವಣಗೆರೆ, ಹರಿಹರ ತಾಲೂಕುಗಳ ರೈತರ ಮೆಕ್ಕೆಜೋಳದ ಜಮೀನುಗಳಲ್ಲಿ ನಡೆಸಿದ್ದು ಕಳೆನಾಶಕ ಔಷಧ ಸಿಂಪಡಣೆ ಪ್ರಯೋಗದಿಂದ ಬೆಳೆಯಲ್ಲಿದ್ದ ಮುಳ್ಳುಸಜ್ಜೆ ಕಳೆನಾಶವಾಗಿರುವುದು ಸಾಬೀತಾಗಿದೆ. ಸಂಶೋಧನಾ ಹಂತದಲ್ಲಿ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ' ಎಂದು ತಿಳಿಸಿದರು.

ಕಳೆ ನಿರ್ವಹಣೆ ಔಷಧ(Weedicide): 'ಬಿತ್ತನೆ ಮಾಡಿದ ಮೂರು ದಿನಗಳೊಳಗಾಗಿ 'ಪೆಂಡಿ ಮೆಥಾಲಿನ್ 30 ಇಸಿ' ಒಂದು ಲೀಟರ್ ನೀರಿಗೆ 8ರಿಂದ 10 ಎಂಎಲ್ ಹಾಕಿ ಸಿಂಪಡಣೆ ಮಾಡಬೇಕು. ನಂತರ 12 ರಿಂದ 15 ದಿನಗಳ ಬೆಳೆಗೆ ಹಾಗೂ 30 ದಿನಗಳ ಬೆಳೆಯಲ್ಲಿರುವ (ಸಣ್ಣ) ಮುಳ್ಳುಸಜ್ಜೆ ಕಳೆ ನಿಯಂತ್ರಣಕ್ಕೆ 'ಮೆಸೋಟ್ರೇನ್ ಆಟ್ರಾಜಿನ್' ಔಷಧ ಸಿಂಪಡಿಸಿದರೆ ಕಳೆ ನಿಯಂತ್ರಣಕ್ಕೆ ಬರುತ್ತದೆ. ಈಗಾಗಲೇ ಈ ಪ್ರಯೋಗವನ್ನು ಬಳಸಿದ ರೈತರು ಕಳೆ ನಿಯಂತ್ರಣ ಆಗಿರುವ ಬಗ್ಗೆ ತಿಳಿಸಿದ್ದಾರೆ. ಸಂಶೋಧನೆ ಸಂಪೂರ್ಣ ಮುಗಿದ ನಂತರ ಹೆಚ್ಚಿನ ಮಾಹಿತಿಯನ್ನು ರೈತರಿಗೆ ನೀಡಲಾಗುವುದು' ಎಂದರು.
ಈ ವೇಳೆ ರೈತರಾದ ಸಿಂಗಟಗೆರೆ ರಾಕೇಶ್, ಮಂಜುನಾಥ್, ಹಣಮಂತ ಇದ್ದರು.

]]>
Mon, 14 Jul 2025 10:44:13 +0530 shivuagrico
2 ಹಸು ಖರೀದಿಗೆ 2 ಲಕ್ಷದವರೆಗೆ ಸಹಾಯಧನ ಸೇರಿದಂತೆ ಪಶುಸಂಗೋಪನಾ ಇಲಾಖೆ ಯೋಜನೆಗಳು&Vetarnary department schemes  https://krushirushi.in/Vetarnary-department-schemes-2219 https://krushirushi.in/Vetarnary-department-schemes-2219 2 ಹಸು ಖರೀದಿಗೆ 2 ಲಕ್ಷದವರೆಗೆ ಸಹಾಯಧನ ಸೇರಿದಂತೆ ಪಶುಸಂಗೋಪನಾ ಇಲಾಖೆ ಯೋಜನೆಗಳು-Vetarnary department schemes 

ರಾಜ್ಯದ ರೈತರಿಗೆ ಆರ್ಥಿಕ ನೆರವಿಗಾಗಿ 3%
ಬಡ್ಡಿದರದಲ್ಲಿ 2 ಹಸು ಖರೀದಿ ಮಾಡಲು 2 ಲಕ್ಷವರೆಗೂ
ಸಾಲ ನೀಡಲಿ ಜಿಲ್ಲಾ ಸಹಕಾರಿ ಬ್ಯಾಂಕ್ ಅಧಿಕಾರಿಗಳಿಗೆ
ಸೂಚನೆ ನೀಡಿದ್ದೇನೆ. ಹಾಲು ವಾಹನಗಳಿಗೆ ಜಿಪಿಎಸ್
ವ್ಯವಸ್ಥೆ, ರೈತರ ಹಾಲಿನ ಗುಣಮಟ್ಟ ಎಷ್ಟಿದೆ ಎಂದು
ಸ್ಥಳದಲ್ಲೇ ತಿಳಿಸಲು ಅಗತ್ಯ ತಂತ್ರಜ್ಞಾನ
ಅಳವಡಿಸಲಾಗುತ್ತದೆ. ಇದರ ಮಾಹಿತಿಯನ್ನು ಪ್ರತಿ ನಿತ್ಯ
ನಿಮಗೆ ನೀಡಲಾಗುವುದು'' ಎಂದು ಡಿ ಕೆ ಸುರೇಶ ತಿಳಿಸಿದರು.

Dairy farming-2 ಹಸು,2 ಎಮ್ಮೆ ಖರೀದಿಗೆ 1.25 ಲಕ್ಷ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

 ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ ಹಸುಗಳಿಗೆ ಘಟಕ ವೆಚ್ಚದ ಶೇ.50 ರಷ್ಟು ಅಥವಾ ಗರಿಷ್ಟ 1.25 ಲಕ್ಷ ರೂ. ಸಹಾಯಧನ 


  • * ಎಸ್‌ಸಿ/ಎಸ್‌ಟಿ ರೈತರ ಜಮೀನುಗಳಿಗೆ ಶಾಶ್ವತ ನೀರಾವರಿ ಒದಗಿಸಲು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ 4,923 ಕೊಳವೆ ಬಾವಿಗಳನ್ನು ಕೊರೆಸಲು ಅನುಮತಿ


ಉಚಿತ ಹಾಲು ಕರೆಯುವ ಯಂತ್ರ,ರಬ್ಬರ್ ಮ್ಯಾಟ್,ಸೈಲೆಜ್ ಬ್ಯಾಗ್ ವಿತರಣೆಗೆ ಅರ್ಜಿ ಆಹ್ವಾನ-Free milking machine,cow mat,silage bag


2024-25 ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿಯಲ್ಲಿ ಹಾಲು ಕರೆಯುವ ಯಂತ್ರ(Milking machine), ರಬ್ಬರ್ ನೆಲಹಾಸು(Rubber mat) ಹಾಗೂ ಸೈಲೇಜ್ ಬ್ಯಾಗ್ಗಳನ್ನು(Silage bag) ವಿತರಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ(Vetarnary department)ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಾಲು ಕರೆಯುವ ಯಂತ್ರ  ತಲಾ 1 ರಂತೆ, ರಬ್ಬರ್ ನೆಲಹಾಸು ತಲಾ 2 ರಂತೆ ಹಾಗೂ ಸೈಲೇಜ್ ಬ್ಯಾಗ್ ತಲಾ 100 ಕೆಜಿ ಸಾಮರ್ಥ್ಯದ 1 ಹಾಗೂ 500 ಕೆಜಿ ಸಾಮರ್ಥ್ಯದ 1 ಬ್ಯಾಗ್ ಅನ್ನು ನೀಡಲಾಗುತ್ತದೆ. ಸದರಿ ಫಲಾನುಭವಿಗಳ ಆಯ್ಕೆಯಲ್ಲಿ ರೋಸ್ಟರ್ ನಿಯಾಮಾನುಸಾರದ ಕ್ರಮ ವಹಿಸಲಿದ್ದು, ಆಸಕ್ತರು ತಮ್ಮ ಸ್ಥಳೀಯ ಪಶುವೈದ್ಯಾಧಿಕಾರಿಗಳಿಂದ/ಮುಖ್ಯ ಪಶುವೈದ್ಯಾಧಿಕಾರಿಗಳು ಇವರಿಂದ ಅರ್ಜಿ ನಮೂನೆಯನ್ನು ಪಡೆದು ಎಲ್ಲಾ ದಾಖಲಾತಿಗಳೊಂದಿಗೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮುಖ್ಯ ಪಶು ವೈದ್ಯಾಧಿಕಾರಿಗಳ ಈ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming 

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು(Cow) ಅಥವಾ ಎಮ್ಮೆ(Buffelow) ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್‌ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.


ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Vetarnary department schemes 2025-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?

ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ


ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.

ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.


ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು

ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.


ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.


ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.

ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.


ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.

ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.


ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahvs.karnataka.gov.in/info-2/Schemes+&+Benefits/kn

National livestock mission 2024-ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆ,ಕುರಿ,ಕೋಳಿ,ಮೇಕೆ,ಹಂದಿ ಸಾಕಾಣೆಕೆಗೆ ಅರ್ಜಿ ಆಹ್ವಾನ

ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ, ಮೇಕೆ, ಹಂದಿ ಸಾಕಾಣಿಕೆ ಮತ್ತು ರಸಮೇವು ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.

National livestock mission 


ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ

(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)


 ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.


 ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.

ಅವಶ್ಯಕ ದಾಖಲಾತಿಗಳು :-

1)ಆಧಾರ,

2)ಪಹಣಿ ಪತ್ರ

3)ಬ್ಯಾಂಕ್‌ಖಾತೆ ಸಂಖ್ಯೆ,

ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು

4)ಭಾವ ಚಿತ್ರ.



ಕ್ರ.ಸಂ 

ಘಟಕ 

ಸೌಲಭ್ಯಗಳ ವಿವರ

 

 ಹೈನುಗಾರಿಕೆ 

 

1

ಮಿಶ್ರತಳಿ ದನಗಳ ನಿರ್ವಹಣೆ (1+1)

ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ

 

ಆ. ಸುಧಾರಿತ ಎಮ್ಮೆಗಳ ನಿರ್ವಹಣೆ 
 (1+1)

ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ

 

 ಕುರಿ ಸಾಕಾಣಿಕೆ 

 

2

ಕುರಿಗಳ ನಿರ್ವಹಣೆ (10+01)

 ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ

 

ಕುರಿಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ

 

ಟಗರುಗಳ ನಿರ್ವಹಣೆ (10)

ರೂ. 13,000 ರಂತೆ ಸಾಲ ಸೌಲಭ್ಯ

 

 ಟಗರುಗಳ ನಿರ್ವಹಣೆ (20)

ರೂ. 26,000 ರಂತೆ ಸಾಲ ಸೌಲಭ್ಯ

 

ಮೇಕೆ ಸಾಕಾಣಿಕೆ 

 

3

ಮೇಕೆಗಳ ನಿರ್ವಹಣೆ (10+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ

 

ಮೇಕೆಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ

4

ಹಂದಿ ಸಾಕಾಣಿಕೆ (10)

ರೂ,60,000 ರಂತೆ ಸಾಲ ಸೌಲಭ್ಯ

 

           ಕೋಳಿ ಸಾಕಾಣಿಕೆ 

 

5

ಮಾಂಸದ ಕೋಳಿ ಸಾಕಾಣಿಕೆ

2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ

 

 ಮೊಟ್ಟೆ ಕೋಳಿ ಸಾಕಾಣಿಕೆ

1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.

ಈ ಮಾಹಿತಿ ನಿಮಗೆ ಉಪಯೋಗವಾಗಿದ್ದರೆ ಬೇರೆಯವರಿಗೂ ಹಂಚಿಕೊಳ್ಳಿ ಧನ್ಯವಾದಗಳು

]]>
Mon, 14 Jul 2025 07:53:14 +0530 shivuagrico
30hp ಟ್ರ್ಯಾಕ್ಟರ್ ಗೆ ಸಿಗಲಿದೆ 2.5 ಲಕ್ಷ ಸಬ್ಸಿಡಿ&National Horticulture mission https://krushirushi.in/National-horticulture-mission-2025 https://krushirushi.in/National-horticulture-mission-2025 30hp ಟ್ರ್ಯಾಕ್ಟರ್ ಗೆ ಸಿಗಲಿದೆ 2.5 ಲಕ್ಷ ಸಬ್ಸಿಡಿ-National Horticulture mission

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಕೃಷಿಹೊಂಡ, ಪ್ಯಾಕ್‌ಹೌಸ್, ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್‌ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


 ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾ‌ರ್ ಕಾರ್ಡ್ ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ

https://horticulturedir.karnataka.gov.in/info-2/Facilities+available+to+farmers/kn

ವಿವಿಧ ಯೋಜನೆಗಳು:

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ:

ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೆÇೀಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:
ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಯಾಕ್‍ಹೌಸ್ ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ:
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.75 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ:

ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಮತ್ತು ಬೈಯೋಡೈಜಿಸ್ಟರ್ ಮತ್ತು ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಸಹ ಅರ್ಜಿ ಆಹ್ವಾನಿಸಲಾಗಿದೆ.

ಮೇಲ್ಕಂಡ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಲಾಗಿದೆ. ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.

]]>
Sun, 13 Jul 2025 10:12:54 +0530 shivuagrico
Pusya male nakshtra&ಅಗಸ್ಟ 2ರವರೆಗೆ ಪುಷ್ಯ ಮಳೆ, ಪುಷ್ಯ ಮಳೆ ಭಾಷೆ ಕೊಟ್ಟ ಮಳೆ,ನೆಟ್ಟ ಗಿಡ ಪುಟುಗೋಸಿ ಆದೀತು. https://krushirushi.in/Punarvasu-male-nakshtra-2217 https://krushirushi.in/Punarvasu-male-nakshtra-2217 Pusya male nakshtra-ಅಗಸ್ಟ 2ರವರೆಗೆ ಪುಷ್ಯ ಮಳೆ, ಪುಷ್ಯ ಮಳೆ ಭಾಷೆ ಕೊಟ್ಟ ಮಳೆ,ನೆಟ್ಟ ಗಿಡ ಪುಟುಗೋಸಿ ಆದೀತು.

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಮೈಸೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.


ಈಗಿನಂತೆ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ ಕೊಡಗು ಜಿಲ್ಲೆ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.


ದಕ್ಷಿಣ ಒಳನಾಡಿನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.


ಈಗಿನಂತೆ ಮುಂದಿನ 2 ದಿವಸಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆಗಳಿದ್ದು, ನಂತರ ಕಡಿಮೆಯಾಗಬಹುದು. ಜುಲೈ 16ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಮುಂಗಾರು ಮಾರುತಗಳು ಶ್ರೀಲಂಕಾ ಕರಾವಳಿ ಮೂಲಕ ಸಾಗಿಬಂದು ತಮಿಳುನಾಡು ಕರಾವಳಿಗೆ ನುಗ್ಗುತ್ತಿರುವುದರಿಂದ ತಮಿಳುನಾಡು ಭಾಗದಿಂದ ಬರುತ್ತಿರುವ ಮೋಡಗಳಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

Male nakshatragalu-2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು


2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-14-4-2025

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-28-4-2025

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2025

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-25-5-2025

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-6-7-2025

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-20-7-2025

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-31-8-2025

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2025

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-27-9-2025

ಉತ್ತಮ ಮಳೆ

14.ಚಿತ್ತ

ದಿನಾಂಕ-11-10-2025

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-24-10-2025

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2025

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs  ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in  website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.     

https://krushirushi.in/contact-us


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ

]]>
Sat, 12 Jul 2025 06:54:37 +0530 shivuagrico
Bele vime&ಇನ್ನು ಮುಂದೆ ವಾರದೊಳಗೆ ಬೆಳೆ ವಿಮೆ ಪರಿಹಾರ&ಕೃಷಿ ಸಚಿವ ಚೆಲುವರಾಯಸ್ವಾಮಿ https://krushirushi.in/Bele-vime-2216 https://krushirushi.in/Bele-vime-2216 Bele vime-ಇನ್ನು ಮುಂದೆ ವಾರದೊಳಗೆ ಬೆಳೆ ವಿಮೆ ಪರಿಹಾರ-ಕೃಷಿ ಸಚಿವ ಚೆಲುವರಾಯಸ್ವಾಮಿ

ವಾರದಲ್ಲಿ ವಿಮೆ ಹಣ ಜಮಾ: 'ಬೆಳೆ ವಿಮೆ' 
ಪರಿಹಾರ ಮೊತ್ತ ವಿಳಂಬವಾಗುತ್ತಿರುವುದಕ್ಕೆ ಹೆಚ್ಚಿನ ಕರೆಗಳ ಬಂದವು. ರಾಣೆಬೆನ್ನೂರು ತಾಲೂಕಿನ ಜೋಯಿಸರ ಹಳ್ಳಿಯ ಶಂಕರಪ್ಪ ರಾಮಪ್ಪ, ಕಲಬುರಗಿಯ ಬಾಬು ಸಾಬ್ ಪಾಟೀಲ್, ಶಿರಾ ತಾಲೂಕಿನ ತಿಮ್ಮರಾಜು, ವಿಜಯಪುರದ ಹನುಮಂತ, ರಾಯಚೂರು ಮಾನ್ವಿ ತಾಲೂಕಿನ ಮಿರಾಜುದ್ದೀನ್, ಗೌರಿಬಿದನೂರು ತಾಲೂಕಿನ ಸತೀಶ್ ಸೇರಿದಂತೆ ಇನ್ನೂ ಕೆಲವರು ಪ್ರಸ್ತಾಪಿಸಿದ ಬೆಳೆ ವಿಮೆ ಸೂಕ್ತ ಸಮಯಕ್ಕೆ ಬಾರದಿರುವ ವಿಚಾರಕ್ಕೆ ಸಚಿವರು ಸ್ಪಂದಿಸಿದರು. 



"ಸಮೀಕ್ಷೆ ನಡೆಸಿ ಬೆಳೆ ಹಾನಿಯಾಗಿರುವುದು ಖಾತರಿಯಾಗಷ್ಟೇ ಬೆಳೆ ವಿಮೆ ಪರಿಹಾರ ನೀಡಲಾಗುತ್ತದೆ. ಈಗಾಗಲೇ ಬೆಳೆ ವಿಮೆ ಹಣ ರೈತರ ಖಾತೆಗೆ ಜಮೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕಳೆದ ವರ್ಷದ ಬೆಳೆ ವಿಮೆ ಪರಿಹಾರ ವಾರರೊಳಗೆ ರೈತರ ಖಾತೆಗೆ ಜಮೆಯಾಗಲಿದೆ. ಕಲಬುರಗಿಯಲ್ಲಿ ಕಳೆದ ಅಕ್ಟೋಬ‌ರ್-ನವೆಂಬರ್ ನಲ್ಲಿ ಆದ ಬೆಳೆಹಾನಿಗೆ 600 ಕೋಟಿ ಪರಿಹಾರ ನೀಡಲಾಗಿದೆ ಎಂದು ಹೇಳಿದರು.

 ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Fri, 11 Jul 2025 07:41:55 +0530 shivuagrico
PMFME ಯೋಜನೆಯಡಿ ರೊಟ್ಟಿ ಮಶೀನ್,ಹಿಟ್ಟಿನ ಗಿರಣೆ,ಎಣ್ಣಿ ಗಾಣ,ಬೆಲ್ಲದ ಗಾಣ,ಖಾರದ ಪುಡಿ,ಶಾವಿಗೆ,ಬೇಕರಿ,ಕುರಿ,ಕೋಳಿ ಫುಡ್ ತಯಾರಿಕೆಗೆ 15 ಲಕ್ಷ ಸಬ್ಸಿಡಿ&PMFME subsidy scheme https://krushirushi.in/PMFME-2215 https://krushirushi.in/PMFME-2215 PMFME ಯೋಜನೆಯಡಿ ರೊಟ್ಟಿ ಮಶೀನ್,ಹಿಟ್ಟಿನ ಗಿರಣೆ,ಎಣ್ಣಿ ಗಾಣ,ಬೆಲ್ಲದ ಗಾಣ,ಖಾರದ ಪುಡಿ,ಶಾವಿಗೆ,ಬೇಕರಿ,ಕುರಿ,ಕೋಳಿ ಫುಡ್ ತಯಾರಿಕೆಗೆ 15 ಲಕ್ಷ ಸಬ್ಸಿಡಿ-PMFME subsidy scheme

ಕರ್ನಾಟಕದಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗಾಗಿ PMFME ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸುವ ಸಭೆಯನ್ನು ಇಂದು ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಯಿತು.

ಈ ಯೋಜನೆ ಅಡಿಯಲ್ಲಿ ಸಿರಿಧಾನ್ಯಗಳು, ಬೆಲ್ಲ, ಬೇಕರಿ ಉತ್ಪನ್ನಗಳು ಸೇರಿದಂತೆ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಶೇ. 50 ಅಥವಾ ಗರಿಷ್ಠ ₹15 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತಿದೆ. ಇದರಲ್ಲಿ ಕೇಂದ್ರದ ₹6 ಲಕ್ಷ ಮತ್ತು ರಾಜ್ಯದ ₹9 ಲಕ್ಷ ಪಾಲು ಸೇರಿದ್ದು, ವೈಯಕ್ತಿಕ ಉದ್ದಿಮೆದಾರರು, ಗುಂಪುಗಳು ಮತ್ತು ಸ್ವಸಹಾಯ ಸಂಘಗಳಿಗೆ ಇದು ವರದಾನವಾಗಿದೆ. ಸ್ವಸಹಾಯ ಸಂಘಗಳ ಸದಸ್ಯರಿಗೆ ₹40,000 ವರೆಗೆ ಬೀಜ ಬಂಡವಾಳ ಮತ್ತು ಸಂಘಗಳಿಗೆ ₹4 ಲಕ್ಷದ ವರೆಗೆ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ.

ಕೃಷಿಕರನ್ನು ಉದ್ಯಮಿಗಳನ್ನಾಗಿ ಪರಿವರ್ತಿಸುವ ಗುರಿ ಹೊಂದಿರುವ ಕೆಪೆಕ್, ಈ ಯೋಜನೆಯಡಿ ಕರ್ನಾಟಕದಲ್ಲಿ 11,910 ಉದ್ಯಮಗಳನ್ನು ಸ್ಥಾಪಿಸಲು/ಉನ್ನತೀಕರಿಸಲು ₹493 ಕೋಟಿ ಅನುದಾನ ಮೀಸಲಿಟ್ಟಿದೆ. ಇದು ವೈಯಕ್ತಿಕ ಉದ್ಯಮಿಗಳಿಗೆ 35% (60:40) ಸಬ್ಸಿಡಿ ಜೊತೆಗೆ ಕರ್ನಾಟಕ ಸರ್ಕಾರದಿಂದ 15% ಹೆಚ್ಚುವರಿ ಟಾಪ್-ಅಪ್ ಸಬ್ಸಿಡಿ ನೀಡುತ್ತದೆ.

ಈಗಾಗಲೇ 6,585 ಅರ್ಜಿಗಳಿಗೆ ಸಾಲ ಮಂಜೂರಾಗಿದ್ದು, ₹756.48 ಕೋಟಿ ಬಂಡವಾಳ ಹೂಡಿಕೆಯಾಗಿದೆ. 4,489 ಫಲಾನುಭವಿಗಳಿಗೆ ₹162.50 ಕೋಟಿ ಸಹಾಯಧನ ಹಾಗೂ 3,770 ಫಲಾನುಭವಿಗಳಿಗೆ ₹59.48 ಕೋಟಿ ಹೆಚ್ಚುವರಿ ಸಹಾಯಧನ ಬಿಡುಗಡೆ ಮಾಡಲಾಗಿದೆ. ಜೊತೆಗೆ, 5 ಬ್ರ್ಯಾಂಡಿಂಗ್ ಮಾರ್ಕೆಟಿಂಗ್ ಪ್ರಸ್ತಾವನೆಗಳು, 4 ಸಾಮಾನ್ಯ ಮೂಲಭೂತ ಸೌಕರ್ಯ ಘಟಕಗಳು ಮತ್ತು 14 ಇನ್ಕ್ಯುಬೇಷನ್ ಕೇಂದ್ರಗಳನ್ನು ಸ್ಥಾಪಿಸಿ, ರಾಜ್ಯದಲ್ಲಿ ಆಹಾರ ಸಂಸ್ಕರಣಾ ವಲಯದ ಬೆಳವಣಿಗೆಗೆ ಆದ್ಯತೆ ನೀಡಲಾಗುತ್ತಿದೆ.

#PMFME #FoodProcessing #Agriculture #Empowerment #KEPEC #Farmers #SelfHelpGroups

ಪಿಎಂಎಫ್ಎಮ್ ಇ ಯೋಜನೆಯಡಿ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಅರ್ಜಿ ಆಹ್ವಾನ-pmfme subsidy scheme 

ಯಾವ ಯಾವ ಉದ್ಯಮ ಮಾಡಬಹುದು?
 ರೊಟ್ಟಿ ಮಾಡುವ ಯಂತ್ರ, ಎಣ್ಣೆಗಾಣ, ಬೆಲ್ಲದ ಗಾಣ, ಕಾರದಪುಡಿ ಘಟಕ, ಶಾವಿಗೆ, ಹಪ್ಪಳ-ಸಂಡಿಗೆ, ಹಿಟ್ಟಿನ ಗಿರಣಿ, ಬೇಕರಿ ಉತ್ಪನ್ನ, ಹಾಲಿನ ಉತ್ಪನ್ನ, ಉಪ್ಪಿನಕಾಯಿ ಸೇರಿದಂತೆ ಕಿರು ಆಹಾರ ಸಂಸ್ಕರಣೆ

 ಅರ್ಜಿ ಸಲ್ಲಿಸುವುದು ಹೇಗೆ?
 ಅರ್ಜಿ ಸಲ್ಲಿಸುವವರು http://mofpi.nic.in/pmfme/ ಪೋರ್ಟಲ್ ನಲ್ಲಿ ವಿವರಗಳನ್ನು ಭರ್ತಿ ಮಾಡಬೇಕು ಅಥವಾ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಮೂಲಕ ಕೂಡ ಅರ್ಜಿ ವಿವರಗಳನ್ನು ಭರ್ತಿ ಮಾಡಿಸಬಹುದು. ಜಿಲ್ಲಾ ಮಟ್ಟದಲ್ಲಿ ನೇಮಿಸಲ್ಪಟ್ಟ ಸಂಪನ್ಮೂಲ ವ್ಯಕ್ತಿಗಳು(District resource person) ಅರ್ಜಿ ಹಾಗೂ ಯೋಜನಾ ವರದಿ(Detail project report) ಪರಿಶೀಲಿಸಿ ಜಿಲ್ಲಾ ಮಟ್ಟದ ಸಮಿತಿಗೆ ಸಲ್ಲಿಸುತ್ತಾರೆ. ಸಮಿತಿ ಅಧ್ಯಕ್ಷರು ಜಂಟಿ ಕೃಷಿ ನಿರ್ದೇಶಕ ರಾಗಿದ್ದು, ಸದರಿ ಅರ್ಜಿಗಳನ್ನು ಸಮಿತಿಯಲ್ಲಿಟ್ಟು ಅರ್ಹ ಫಲಾನುಭವಿಗಳ ಆಯ್ಕೆ ಮಾಡಿಕೊಂಡು, ಬ್ಯಾಂಕ್ಗಳಿಗೆ ಸಾಲ ಮಂಜೂರಾತಿಗಾಗಿ ಕಳುಹಿಸುತ್ತಾರೆ. ಸಂಸ್ಥೆಗಳ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಸಮಿತಿಯು ನೋಡಲ ಏಜೆನ್ಸಿಗೆ ವರ್ಗಾಯಿಸುತ್ತದೆ ಹಾಗೂ ಅರ್ಜಿದಾರರಿಗೆ ಮಾಹಿತಿ ನೀಡಲು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸಹಕರಿಸುತ್ತಾರೆ. ಒಂದು ವೇಳೆ ಅರ್ಜಿಗಳು ಸಂಸ್ಥೆಗಳಿಂದ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಮಟ್ಟದ ಸಮಿತಿ ವರದಿ ಸಲ್ಲಿಸುತ್ತದೆ.ರಾಜ್ಯ ಮಟ್ಟದ ಸಮಿತಿಗೆ ಸಲ್ಲಿಸುತ್ತದೆ. 15 ಲಕ್ಷಕ್ಕೂ ಹೆಚ್ಚು ಸಹಾಯಧನ ಬೇಕಾಗಿದ್ದಲ್ಲಿ ಸದರಿ ಅರ್ಜಿಗಳನ್ನು ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ಯಮಗಳ ಮಂತ್ರಾಲಯಕ್ಕೆ ಅನುಮೋದನೆಗಾಗಿ ಕಳುಹಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್(Aadhar card)
ಪ್ಯಾನ್ ಕಾರ್ಡ್(Pan card)
ಬ್ಯಾಂಕ್ ಪಾಸಬುಕ್(Bank passbook)

PMFME-ಕಿರು ಆಹಾರ ಉದ್ಯಮ ಸ್ಥಾಪನೆಗೆ 50% ಸಬ್ಸಿಡಿ,ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ಜಿಲ್ಲೆಗಳ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ (DRP contact number) ಸಂಪರ್ಕ ಸಂಖ್ಯೆ ತಿಳಿಯಲು ಈ ಕೆಳಗಿನ pdf download ಮಾಡಿಕೊಳ್ಳಿ
]]>
Wed, 09 Jul 2025 22:30:08 +0530 shivuagrico
Bharath band&ಇಂದು ಭಾರತ್ ಬಂದ್ ಏನಿರುತ್ತೆ? ಏನಿರಲ್ಲ? https://krushirushi.in/Bharath-band-2214 https://krushirushi.in/Bharath-band-2214
Bharath band-ಇಂದು ಭಾರತ್ ಬಂದ್ ಏನಿರುತ್ತೆ? ಏನಿರಲ್ಲ?
ನಾಳೆ ಅಂದರೆ ಜುಲೈ 9, 2025ರಂದು ದೇಶಾದ್ಯಂತ ಬ್ಯಾಂಕಿಂಗ್, ವಿಮೆ, ಕಲ್ಲಿದ್ದಲು ಗಣಿಗಾರಿಕೆ, ಹೆದ್ದಾರಿಗಳು, ನಿರ್ಮಾಣ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡುವ 25 ಕೋಟಿಗೂ ಹೆಚ್ಚು ಉದ್ಯೋಗಿಗಳು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ ನಡೆಸಲಿದು, ಈ ಕಾರಣದಿಂದಾಗಿ ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ. ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ರಾಷ್ಟ್ರ ವಿರೋಧಿ ನೀತಿಗಳನ್ನು ವಿರೋಧಿಸಿ 10 ಕೇಂದ್ರ ಕಾರ್ಮಿಕ ಸಂಘಗಳು ಮತ್ತು ಅವುಗಳ ಸಂಯೋಜಿತ ಘಟಕಗಳ ವೇದಿಕೆಯಿಂದ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಭಾರತ್‌ ಬಂದ್‌; ನಾಳೆ ಏನಿರುತ್ತೆ? ಏನಿರಲ್ಲ?

ಇನ್ನು, ಬಂದ್‌ ಎಂದಾಕ್ಷಣ ಅನೇಕ ಸಂಗತಿಗಳು ದಿನಿತ್ಯದಂತೆ ಇರುವುದಿಲ್ಲ. ಹೀಗಾಗಿ ಬಂದ್‌ ಸಮಯದಲ್ಲಿ ಮುನ್ನೆಚ್ಚರಿಕೆಯಾಗಿ ಅನೇಕ ಸೇವೆಗಳೂ ಸಹ ಬಂದ್‌ ಆಗಲಿದೆ. ಹಾಗಿದ್ದರೆ ನಾಳಿನ ಭಾರತ್‌ ಬಂದ್‌ ನಿಮಿತ್ತ ಏನಿರುತ್ತೆ? ಏನಿರಲ್ಲ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ನಾಳೆ ಏನಿರಲ್ಲ?

ನಾಳೆ ರಾಷ್ಟ್ರವ್ಯಾಪಿ ಎಲ್ಲಾ ಬ್ಯಾಂಕ್‌ಗಳು ಮುಚ್ಚುವ ಸಾಧ್ಯತೆ ಇದೆ. ಇದರಿಂದಾಗಿ ನಿಮ್ಮ ದಿನಿತ್ಯದ ಬ್ಯಾಕಿಂಗ್‌ ಕೆಲಸಗಳಿಗೆ ಸಮಸ್ಯೆ ಆಗಬಹುದು. ಹಣಕಾಸು ಚಟುವಟಿಕೆಗಳು ಸ್ಥಗಿತಗೊಳ್ಳಬಹುದು. ಇದರ ಜೊತೆಗೆ ಮುಖ್ಯವಾಗಿ ನೋಡುವುದಾದರೆ ಅಂಚೆ ಕಚೇರಿಗಳು, ಕಲ್ಲಿದ್ದಲು ಗಣಿಗಾರಿಕೆ ಘಟಕಗಳು ಮುಚ್ಚಲ್ಪಡಬಹುದು. ಸಂಚಾರದಲ್ಲಿ ಅದರಲ್ಲಿಯೂ ಸರ್ಕಾರಿ ಸಾರಿಗೆ ಹಾಗೂ ಖಾಸಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಯಾವ ರೀತಿ ಬದಲಾವಣೆ ಆಗಲಿದೆ ಎಂದು ಈವರೆಗ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಆದರೆ ಏನಾದರೂ ಈ ಬಂದ್‌ ತೀವ್ರವಾದರೆ ಆಗ ಮುನ್ನೆಚ್ಚರಿಕೆಯಾಗಿ ಸಾರಿಗೆ ವ್ಯವಸ್ಥೆ ಸಹ ಬಂದ್‌ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ನಾಳೆ ಏನಿರುತ್ತೆ?

ಇನ್ನು, ಈ ಮೇಲೆ ತಿಳಿಸಿದ ಸೇವೆಗಳು ಬಂದ್‌ ಆಗುವಸ ಸಾಧ್ಯತೆ ಇದೆ. ಆದರೆ ನಾಳಿನ ಭಾರತ್‌ ಬಂದ್ ಸಮಯದಲ್ಲಿ ಜನಸಾಮಾನ್ಯರಿಗೆ ಪ್ರಮುಖವಾಗಿ ಬೇಕಾಗಿರುವಂತಹ ರೈಲ್ವೆ, ಆರೋಗ್ಯ ಮತ್ತು ತುರ್ತು ಸೇವೆಗಳಂತಹ ಅಗತ್ಯ ಸೇವೆಗಳಿಗೆ ಈ ಮುಷ್ಕರದಿಂದ ವಿನಾಯಿತಿ ನೀಡಲಾಗಿದೆ. ದಿನಿತ್ಯದ ಹಾಲು, ಔಷಧ, ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ. ಈ ಬಂದ್‌ನಿಂದ ಬ್ಯಾಂಕ್‌ ವಹಿವಾಟು ಕಷ್ಟವಾದರೂ ಸಹ ನಿಮ್ಮ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳಾದ UPI ಮತ್ತು ನೆಟ್ ಬ್ಯಾಂಕಿಂಗ್ ಎಂದಿನಂತೆ ಕಾರ್ಯನಿರ್ವಹಿಸಲಿದೆ.

25 ಕೋಟಿಗೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ:

ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಅಮರ್‌ಜಿತ್ ಕೌರ್ ಪ್ರಕಾರ, ಈ ಮುಷ್ಕರದಲ್ಲಿ 25 ಕೋಟಿಗೂ ಹೆಚ್ಚು ಉದ್ಯೋಗಿಗಳು ಭಾಗವಹಿಸುವ ನಿರೀಕ್ಷೆಯಿದೆ. ರೈತರು ಮತ್ತು ಗ್ರಾಮೀಣ ಕಾರ್ಮಿಕರು ಸಹ ಈ ಪ್ರತಿಭಟನೆಯನ್ನು ಬೆಂಬಲಿಸಲಿದ್ದಾರೆ. ಎನ್‌ಎಂಡಿಸಿ ಲಿಮಿಟೆಡ್, ಇತರ ಖನಿಜ, ಉಕ್ಕು ಕಂಪನಿಗಳು, ರಾಜ್ಯ ಸರ್ಕಾರಿ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರು ಸಹ ಮುಷ್ಕರದಲ್ಲಿ ಭಾಗವಹಿಸುವುದಾಗಿ ವರದಿಯಾಗಿದೆ. ಯುನೈಟೆಡ್ ಕಿಸಾನ್ ಮೋರ್ಚಾ ಮತ್ತು ಕೃಷಿ ಕಾರ್ಮಿಕರ ಸಂಘಟನೆಗಳು ಸಹ ಮುಷ್ಕರವನ್ನು ಬೆಂಬಲಿಸಿವೆ.
]]>
Tue, 08 Jul 2025 21:15:12 +0530 shivuagrico
ಗಣೇಶ ಚತುರ್ಥಿಯಂದು ಗೃಹಿಣಿಯರ ಖಾತೆಗೆ ಗೃಹಲಕ್ಷ್ಮಿ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ&Gruhalakshmi status https://krushirushi.in/Gruhalakshmi-status https://krushirushi.in/Gruhalakshmi-status ಗಣೇಶ ಚತುರ್ಥಿಯಂದು ಗೃಹಿಣಿಯರ ಖಾತೆಗೆ ಗೃಹಲಕ್ಷ್ಮಿ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ-Gruhalakshmi status

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Mon, 07 Jul 2025 07:41:24 +0530 shivuagrico
PMFME ಯೋಜನೆಯಡಿ ರೊಟ್ಟಿ ಮಶೀನ್,ಹಿಟ್ಟಿನ ಗಿರಣೆ,ಎಣ್ಣಿ ಗಾಣ,ಬೆಲ್ಲದ ಗಾಣ,ಖಾರದ ಪುಡಿ,ಶಾವಿಗೆ,ಬೇಕರಿ,ಕುರಿ,ಕೋಳಿ ಫುಡ್ ತಯಾರಿಕೆಗೆ 15 ಲಕ್ಷ ಸಬ್ಸಿಡಿ&PMFME subsidy scheme https://krushirushi.in/PMFME-subsidy-scheme-2212 https://krushirushi.in/PMFME-subsidy-scheme-2212 PMFME ಯೋಜನೆಯಡಿ ರೊಟ್ಟಿ ಮಶೀನ್,ಹಿಟ್ಟಿನ ಗಿರಣೆ,ಎಣ್ಣಿ ಗಾಣ,ಬೆಲ್ಲದ ಗಾಣ,ಖಾರದ ಪುಡಿ,ಶಾವಿಗೆ,ಬೇಕರಿ,ಕುರಿ,ಕೋಳಿ ಫುಡ್ ತಯಾರಿಕೆಗೆ 15 ಲಕ್ಷ ಸಬ್ಸಿಡಿ-PMFME subsidy scheme

ಕರ್ನಾಟಕದಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗಾಗಿ PMFME ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸುವ ಸಭೆಯನ್ನು ಇಂದು ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಯಿತು.

ಈ ಯೋಜನೆ ಅಡಿಯಲ್ಲಿ ಸಿರಿಧಾನ್ಯಗಳು, ಬೆಲ್ಲ, ಬೇಕರಿ ಉತ್ಪನ್ನಗಳು ಸೇರಿದಂತೆ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಶೇ. 50 ಅಥವಾ ಗರಿಷ್ಠ ₹15 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತಿದೆ. ಇದರಲ್ಲಿ ಕೇಂದ್ರದ ₹6 ಲಕ್ಷ ಮತ್ತು ರಾಜ್ಯದ ₹9 ಲಕ್ಷ ಪಾಲು ಸೇರಿದ್ದು, ವೈಯಕ್ತಿಕ ಉದ್ದಿಮೆದಾರರು, ಗುಂಪುಗಳು ಮತ್ತು ಸ್ವಸಹಾಯ ಸಂಘಗಳಿಗೆ ಇದು ವರದಾನವಾಗಿದೆ. ಸ್ವಸಹಾಯ ಸಂಘಗಳ ಸದಸ್ಯರಿಗೆ ₹40,000 ವರೆಗೆ ಬೀಜ ಬಂಡವಾಳ ಮತ್ತು ಸಂಘಗಳಿಗೆ ₹4 ಲಕ್ಷದ ವರೆಗೆ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ.

ಕೃಷಿಕರನ್ನು ಉದ್ಯಮಿಗಳನ್ನಾಗಿ ಪರಿವರ್ತಿಸುವ ಗುರಿ ಹೊಂದಿರುವ ಕೆಪೆಕ್, ಈ ಯೋಜನೆಯಡಿ ಕರ್ನಾಟಕದಲ್ಲಿ 11,910 ಉದ್ಯಮಗಳನ್ನು ಸ್ಥಾಪಿಸಲು/ಉನ್ನತೀಕರಿಸಲು ₹493 ಕೋಟಿ ಅನುದಾನ ಮೀಸಲಿಟ್ಟಿದೆ. ಇದು ವೈಯಕ್ತಿಕ ಉದ್ಯಮಿಗಳಿಗೆ 35% (60:40) ಸಬ್ಸಿಡಿ ಜೊತೆಗೆ ಕರ್ನಾಟಕ ಸರ್ಕಾರದಿಂದ 15% ಹೆಚ್ಚುವರಿ ಟಾಪ್-ಅಪ್ ಸಬ್ಸಿಡಿ ನೀಡುತ್ತದೆ.

ಈಗಾಗಲೇ 6,585 ಅರ್ಜಿಗಳಿಗೆ ಸಾಲ ಮಂಜೂರಾಗಿದ್ದು, ₹756.48 ಕೋಟಿ ಬಂಡವಾಳ ಹೂಡಿಕೆಯಾಗಿದೆ. 4,489 ಫಲಾನುಭವಿಗಳಿಗೆ ₹162.50 ಕೋಟಿ ಸಹಾಯಧನ ಹಾಗೂ 3,770 ಫಲಾನುಭವಿಗಳಿಗೆ ₹59.48 ಕೋಟಿ ಹೆಚ್ಚುವರಿ ಸಹಾಯಧನ ಬಿಡುಗಡೆ ಮಾಡಲಾಗಿದೆ. ಜೊತೆಗೆ, 5 ಬ್ರ್ಯಾಂಡಿಂಗ್ ಮಾರ್ಕೆಟಿಂಗ್ ಪ್ರಸ್ತಾವನೆಗಳು, 4 ಸಾಮಾನ್ಯ ಮೂಲಭೂತ ಸೌಕರ್ಯ ಘಟಕಗಳು ಮತ್ತು 14 ಇನ್ಕ್ಯುಬೇಷನ್ ಕೇಂದ್ರಗಳನ್ನು ಸ್ಥಾಪಿಸಿ, ರಾಜ್ಯದಲ್ಲಿ ಆಹಾರ ಸಂಸ್ಕರಣಾ ವಲಯದ ಬೆಳವಣಿಗೆಗೆ ಆದ್ಯತೆ ನೀಡಲಾಗುತ್ತಿದೆ.

#PMFME #FoodProcessing #Agriculture #Empowerment #KEPEC #Farmers #SelfHelpGroups

ಪಿಎಂಎಫ್ಎಮ್ ಇ ಯೋಜನೆಯಡಿ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಅರ್ಜಿ ಆಹ್ವಾನ-pmfme subsidy scheme 

ಯಾವ ಯಾವ ಉದ್ಯಮ ಮಾಡಬಹುದು?
 ರೊಟ್ಟಿ ಮಾಡುವ ಯಂತ್ರ, ಎಣ್ಣೆಗಾಣ, ಬೆಲ್ಲದ ಗಾಣ, ಕಾರದಪುಡಿ ಘಟಕ, ಶಾವಿಗೆ, ಹಪ್ಪಳ-ಸಂಡಿಗೆ, ಹಿಟ್ಟಿನ ಗಿರಣಿ, ಬೇಕರಿ ಉತ್ಪನ್ನ, ಹಾಲಿನ ಉತ್ಪನ್ನ, ಉಪ್ಪಿನಕಾಯಿ ಸೇರಿದಂತೆ ಕಿರು ಆಹಾರ ಸಂಸ್ಕರಣೆ

 ಅರ್ಜಿ ಸಲ್ಲಿಸುವುದು ಹೇಗೆ?
 ಅರ್ಜಿ ಸಲ್ಲಿಸುವವರು http://mofpi.nic.in/pmfme/ ಪೋರ್ಟಲ್ ನಲ್ಲಿ ವಿವರಗಳನ್ನು ಭರ್ತಿ ಮಾಡಬೇಕು ಅಥವಾ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಮೂಲಕ ಕೂಡ ಅರ್ಜಿ ವಿವರಗಳನ್ನು ಭರ್ತಿ ಮಾಡಿಸಬಹುದು. ಜಿಲ್ಲಾ ಮಟ್ಟದಲ್ಲಿ ನೇಮಿಸಲ್ಪಟ್ಟ ಸಂಪನ್ಮೂಲ ವ್ಯಕ್ತಿಗಳು(District resource person) ಅರ್ಜಿ ಹಾಗೂ ಯೋಜನಾ ವರದಿ(Detail project report) ಪರಿಶೀಲಿಸಿ ಜಿಲ್ಲಾ ಮಟ್ಟದ ಸಮಿತಿಗೆ ಸಲ್ಲಿಸುತ್ತಾರೆ. ಸಮಿತಿ ಅಧ್ಯಕ್ಷರು ಜಂಟಿ ಕೃಷಿ ನಿರ್ದೇಶಕ ರಾಗಿದ್ದು, ಸದರಿ ಅರ್ಜಿಗಳನ್ನು ಸಮಿತಿಯಲ್ಲಿಟ್ಟು ಅರ್ಹ ಫಲಾನುಭವಿಗಳ ಆಯ್ಕೆ ಮಾಡಿಕೊಂಡು, ಬ್ಯಾಂಕ್ಗಳಿಗೆ ಸಾಲ ಮಂಜೂರಾತಿಗಾಗಿ ಕಳುಹಿಸುತ್ತಾರೆ. ಸಂಸ್ಥೆಗಳ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಸಮಿತಿಯು ನೋಡಲ ಏಜೆನ್ಸಿಗೆ ವರ್ಗಾಯಿಸುತ್ತದೆ ಹಾಗೂ ಅರ್ಜಿದಾರರಿಗೆ ಮಾಹಿತಿ ನೀಡಲು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸಹಕರಿಸುತ್ತಾರೆ. ಒಂದು ವೇಳೆ ಅರ್ಜಿಗಳು ಸಂಸ್ಥೆಗಳಿಂದ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಮಟ್ಟದ ಸಮಿತಿ ವರದಿ ಸಲ್ಲಿಸುತ್ತದೆ.ರಾಜ್ಯ ಮಟ್ಟದ ಸಮಿತಿಗೆ ಸಲ್ಲಿಸುತ್ತದೆ. 15 ಲಕ್ಷಕ್ಕೂ ಹೆಚ್ಚು ಸಹಾಯಧನ ಬೇಕಾಗಿದ್ದಲ್ಲಿ ಸದರಿ ಅರ್ಜಿಗಳನ್ನು ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ಯಮಗಳ ಮಂತ್ರಾಲಯಕ್ಕೆ ಅನುಮೋದನೆಗಾಗಿ ಕಳುಹಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್(Aadhar card)
ಪ್ಯಾನ್ ಕಾರ್ಡ್(Pan card)
ಬ್ಯಾಂಕ್ ಪಾಸಬುಕ್(Bank passbook)

PMFME-ಕಿರು ಆಹಾರ ಉದ್ಯಮ ಸ್ಥಾಪನೆಗೆ 50% ಸಬ್ಸಿಡಿ,ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ಜಿಲ್ಲೆಗಳ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ (DRP contact number) ಸಂಪರ್ಕ ಸಂಖ್ಯೆ ತಿಳಿಯಲು ಈ ಕೆಳಗಿನ pdf download ಮಾಡಿಕೊಳ್ಳಿ
]]>
Sun, 06 Jul 2025 09:32:27 +0530 shivuagrico
Pension amount status check&ಜುಲೈ ತಿಂಗಳ ವೃದ್ಯಾಪ್ಯ,ಅಂಗವಿಕಲ,ವಿಧವಾ ಸೇರಿದಂತೆ ಎಲ್ಲ ರೀತಿಯ ಪಿಂಚಣೆ ಹಣ ಜಮಾ https://krushirushi.in/Pension-amount-status-check-2211 https://krushirushi.in/Pension-amount-status-check-2211 Pension amount status check-ಜುಲೈ ತಿಂಗಳ ವೃದ್ಯಾಪ್ಯ,ಅಂಗವಿಕಲ,ವಿಧವಾ ಸೇರಿದಂತೆ ಎಲ್ಲ ರೀತಿಯ ಪಿಂಚಣೆ ಹಣ ಜಮಾ

ಕೇಂದ್ರ ಸರ್ಕಾರ ಇತ್ತೀಚೆಗೆ ವಿಧವಾ ಪಿಂಚಣಿ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ, ಇದು ಲಕ್ಷಾಂತರ ಮಹಿಳೆಯರಿಗೆ ಪರಿಹಾರವನ್ನು ತರುತ್ತದೆ. ಈ ಹೆಚ್ಚಳದೊಂದಿಗೆ, ಪಿಂಚಣಿ ಮೊತ್ತವನ್ನು ಗಮನಾರ್ಹವಾಗಿ ಹೆಚ್ಚಿಸಲಾಗಿದ್ದು, ಇದರಿಂದಾಗಿ ಮಹಿಳೆಯರು ಉತ್ತಮ ಆರ್ಥಿಕ ಸಹಾಯವನ್ನು ಪಡೆಯಬಹುದು.

ವಿಧವಾ ಪಿಂಚಣಿ ಯೋಜನೆಯಡಿಯಲ್ಲಿ ಪಡೆಯುವ ಮೊತ್ತವನ್ನು ಮಹತ್ತರವಾಗಿ ಹೆಚ್ಚಿಸಲಾಗಿದೆ. ಮೊದಲು ಈ ಯೋಜನೆಯಲ್ಲಿ ತಿಂಗಳಿಗೆ 500 ರಿಂದ 1000 ರೂಪಾಯಿಗಳವರೆಗೆ ಸಿಗುತ್ತಿತ್ತು ಆದರೆ ಈಗ ಅದನ್ನು ತಿಂಗಳಿಗೆ 2000 ರಿಂದ 3000 ಕ್ಕೆ ಹೆಚ್ಚಿಸಲಾಗಿದೆ. ಇದರರ್ಥ ಮಹಿಳೆಯರು ಮೊದಲಿಗಿಂತ ಹೆಚ್ಚಿನ ಆರ್ಥಿಕ ಸಹಾಯವನ್ನು ಪಡೆಯಲು ಸಾಧ್ಯವಾಗುತ್ತದೆ, ಆದರೂ ಪ್ರತಿ ರಾಜ್ಯ ಸರ್ಕಾರವನ್ನು ಅವಲಂಬಿಸಿ ಮೊತ್ತವು ಸ್ವಲ್ಪ ಬದಲಾಗಬಹುದು. ಆದರೆ ಕೇಂದ್ರ ಸರ್ಕಾರದ ಶಿಫಾರಸಿನ ನಂತರ, ಇದನ್ನು ಅನೇಕ ರಾಜ್ಯಗಳಲ್ಲಿ ಜಾರಿಗೆ ತರಲಾಗಿದ್ದು, ಇದು ಮಹಿಳೆಯರ ಜೀವನವನ್ನು ಸ್ವಲ್ಪ ಸುಲಭಗೊಳಿಸುತ್ತದೆ.

ಪ್ರಮುಖ ಬದಲಾವಣೆಗಳು

ಪಿಂಚಣಿ ಮೊತ್ತ ₹1000 ದಿಂದ ₹2000 ಕ್ಕೆ ಏರಿಕೆ.
ಈಗ ನೀವು ಪ್ರತಿ ತಿಂಗಳು ₹2000 ರಿಂದ ₹3000 ಪಡೆಯುತ್ತೀರಿ.
ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ನಿಯಮಗಳು.

ಈ ಯೋಜನೆಯ ಲಾಭವನ್ನು ಯಾರು ಪಡೆಯಬಹುದು

ಮಹಿಳೆಯ ವಯಸ್ಸು 18 ವರ್ಷಗಳು ಆಗಿರಬೇಕು.
ಮಹಿಳೆಯ ವಾರ್ಷಿಕ ಆದಾಯವು ಸರ್ಕಾರ ನಿಗದಿಪಡಿಸಿದ ಮಿತಿಗಿಂತ ಕಡಿಮೆಯಿರಬೇಕು.
ಮಹಿಳೆಗೆ ಬೇರೆ ಯಾವುದೇ ಸರ್ಕಾರಿ ಪಿಂಚಣಿ ಯೋಜನೆಯ ಲಾಭ ಸಿಗಬಾರದು
ಮಹಿಳೆಯ ಹೆಸರಿನಲ್ಲಿ ಯಾವುದೇ ದೊಡ್ಡ ಆಸ್ತಿ ಅಥವಾ ಕೃಷಿ ಭೂಮಿ ಇರಬಾರದು.
ಈ ಷರತ್ತುಗಳನ್ನು ಪೂರೈಸುವ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬಹುದು.

ಪತಿಯ ಮರಣದ ನಂತರ ಆರ್ಥಿಕವಾಗಿ ದುರ್ಬಲರಾಗಿರುವ ಮತ್ತು ಉತ್ತಮ ಜೀವನ ನಡೆಸಲು ಸಹಾಯ ಬಯಸುವ ಮಹಿಳೆಯರಿಗಾಗಿ ಈ ಯೋಜನೆ ಇದೆ.

ಅರ್ಜಿ ಸಲ್ಲಿಸುವುದು ಹೇಗೆ?

ನೀವು ಈ ಯೋಜನೆಯ ಲಾಭ ಪಡೆಯಲು ಬಯಸಿದರೆ, ಅರ್ಜಿ ಸಲ್ಲಿಸುವುದು ತುಂಬಾ ಸುಲಭ. ನೀವು ಆನ್‌ಲೈನ್ ಮತ್ತು ಆಫ್‌ಲೈನ್ ಎರಡರಲ್ಲೂ ಅರ್ಜಿ ಸಲ್ಲಿಸಬಹುದು.

ರಾಜ್ಯಗಳಾದ್ಯಂತ ಪಿಂಚಣಿ ಮೊತ್ತ

ದೇಶದ ವಿವಿಧ ರಾಜ್ಯಗಳಲ್ಲಿ ಪಿಂಚಣಿ ಮೊತ್ತವು ಬದಲಾಗಬಹುದು. ಕೆಲವು ರಾಜ್ಯಗಳ ಪಿಂಚಣಿ ಮೊತ್ತದ ಬಗ್ಗೆ ಇಲ್ಲಿದೆ ಮಾಹಿತಿ

ರಾಜ್ಯ ಹಿಂದಿನ ಮೊತ್ತ (₹) ಹೊಸ ಮೊತ್ತ (₹)
ಉತ್ತರ ಪ್ರದೇಶ 500 1500₹
ಬಿಹಾರ 600 2000₹
ರಾಜಸ್ಥಾನ 750 2500₹
ಮಧ್ಯಪ್ರದೇಶ 1000 3000₹
ಹರಿಯಾಣ 1200 2500₹
ಮಹಾರಾಷ್ಟ್ರ 800 2000₹
ಕರ್ನಾಟಕ 900 2200₹

ಎಲ್ಲಾ ರೀತಿಯ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://dssp.karnataka.gov.in/dssp/villageWise_list_Of_beneficiaries.aspx

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಅಥವಾ ಪಟ್ಟಣ select ಮಾಡಿ, ಹೊಬಳಿ,ಗ್ರಾಮ select ಮಾಡಿ,Captch type ಮಾಡಿ, Search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿ ಪಿಂಚಣಿ ಪಡೆಯುವವರ ಹೆಸರು ಸಿಗಲಿದೆ

(ಸೂಚನೆ-Desktop mode open ಮಾಡಿಕೊಳ್ಳಿ)

Pension status-ಈ ತಿಂಗಳ ನಿಮ್ಮ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://dssp.karnataka.gov.in/dssp/Beneficiary_Status.aspx

ನಂತರ ನಿಮ್ಮ ಗ್ರಾಮದ ಪಟ್ಟಿಯಲ್ಲಿ ನಿಮ್ಮ beneficiary ID ಹಾಕಿ,captcha type ಮಾಡಿ search ಮೇಲೆ ಕ್ಲಿಕ್ ಮಾಡಿ

ನಂತರ click here to get payment details from SSP portal ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ beneficiary ID ಹಾಗೂ captcha code ಹಾಕಿ search ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಇಲ್ಲಿಯವರೆಗೆ ಜಮಾ ಆದ ಪಿಂಚಣೆ ಹಣ ಮಾಹಿತಿ ದೊರೆಯಲಿದೆ

ಹೀಗೂ ಚೆಕ್ ಮಾಡಬಹುದು

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ pension ಮೇಲೆ ಕ್ಲಿಕ್ ಮಾಡಿ

ನಂತರ ಇಲ್ಲಿಯವರೆಗೂ ಜಮಾ ಆದ ಪಿಂಚಣೆ ಹಣ(pension amount)ಮಾಹಿತಿ ಸಿಗಲಿದೆ.

]]>
Sat, 05 Jul 2025 18:47:32 +0530 shivuagrico
Milk incentive status&9.07 ಲಕ್ಷ ರೈತರ ಖಾತೆಗೆ 2854 ಕೋಟಿ ಹಾಲಿನ ಪ್ರೋತ್ಸಾಹಧನ, ನಿಮಗೇಷ್ಟು ಜಮಾ ಚೆಕ್ ಮಾಡಿ https://krushirushi.in/Milk-incentive-status-2210 https://krushirushi.in/Milk-incentive-status-2210 Milk incentive status-9.07 ಲಕ್ಷ ರೈತರ ಖಾತೆಗೆ 2854 ಕೋಟಿ ಹಾಲಿನ ಪ್ರೋತ್ಸಾಹಧನ, ನಿಮಗೇಷ್ಟು ಜಮಾ ಚೆಕ್ ಮಾಡಿ

ರಾಜ್ಯದಲ್ಲಿ ಹೈನೋದ್ಯಮಕ್ಕೆ ವಿಶೇಷ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ರೈತರ ಆರ್ಥಿಕ ಸದೃಢತೆಗಾಗಿ ಹಾಲು ಉತ್ಪಾದನೆ ಮತ್ತು ಸಂಸ್ಕರಣಾ ವೆಚ್ಚಗಳನ್ನು ಪರಿಗಣಿಸಿ ನಂದಿನಿ ಹಾಲು ಮತ್ತು ಮೊಸರಿನ ದರ ಪರಿಷ್ಕರಣೆ ಮಾಡಲಾಗಿದೆ ಎಂಬುದಾಗಿ ಸರ್ಕಾರ ಸ್ಪಷ್ಟ ಪಡಿಸಿದೆ. 



ಮುಂಬರುವ ಏಪ್ರಿಲ್ 1ರಿಂದ ರಾಜ್ಯದಲ್ಲಿ ನಂದಿನಿ ಹಾಲಿನ ದರವು ₹4 ಹೆಚ್ಚಳವಾಗಲಿದ್ದು, ಇಲ್ಲಿ ಏರಿಕೆಯಾಗುವ ದರದ ಲಾಭವು ರೈತರನ್ನು ತಲುಪಲಿದೆ. ದರ ಏರಿಕೆಯ ನಂತರವೂ ಒಂದು ಲೀಟ‌ರ್ ಹಾಲಿನ ಬೆಲೆ ₹46 ಆಗಲಿದ್ದು, ಇದು ಬೇರೆಲ್ಲಾ ರಾಜ್ಯಗಳಿಗಿಂತಲೂ ಕಡಿಮೆಯಿರಲಿದೆ ಎಂದಿದೆ. 

Milk incentive status-ಇಲ್ಲಿಯವರೆಗೂ ಜಮಾ ಆಗಿರುವ ಹಾಲಿನ ಪ್ರೋತ್ಸಾಹಧನ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ "ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಪ್ರೋತ್ಸಾಹಧನ ಮಾಹಿತಿ ಸಿಗಲಿದೆ.

ಹೀಗೂ ಚೆಕ್ ಮಾಡಬಹುದು

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/Klda/MilkIncentive?ServiceId=5399&Type=TABLE&DepartmentId=3119

ನಂತರ ನಿಮ್ಮ ಜಿಲ್ಲೆ,ತಾಲೂಕು,Milk Union,ಗ್ರಾಮ, select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ನಿಮ್ಮ ಗ್ರಾಮದಲ್ಲಿ ಯಾರಿಗೆಲ್ಲಾ ಎಷ್ಟು ಹಾಲಿನ ಪ್ರೋತ್ಸಾಹಧನ(Milk incentive) ಬಂದಿದೆ ಎಂದು ತಿಳಿಯಲಿದೆ

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732

]]>
Sat, 05 Jul 2025 07:39:37 +0530 shivuagrico
Free sheep training&ಉಚಿತ ಊಟ ವಸತಿಯೊಂದಿಗೆ 13 ದಿನಗಳ ಕುರಿ ಸಾಕಾಣಿಕೆ ತರಬೇತಿ&Uchitha Kuri sakanike tharabethi https://krushirushi.in/Free-sheep-training-2209 https://krushirushi.in/Free-sheep-training-2209 Free sheep training-ಉಚಿತ ಊಟ ವಸತಿಯೊಂದಿಗೆ 13 ದಿನಗಳ ಕುರಿ ಸಾಕಾಣಿಕೆ ತರಬೇತಿ-Uchitha Kuri sakanike tharabethi

 

ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ ಹತ್ತು ದಿನಗಳ ಕಾಲ ಕುರಿ ಸಾಕಾಣಿಕೆ ತರಬೇತಿಯನ್ನು ದಿನಾಂಕ 11/08/2025 ರಿಂದ 23/08/2025 ವರೆಗೆ ಹಮ್ಮಿಕೊಳ್ಳಲಾಗಿದೆ.


ತರಬೇತಿಯಲ್ಲಿ ಕಲಿಸುವ ವಿಷಯಗಳು
1)ಕುರಿ ತಳಿಗಳು

2)ಕುರಿಗೆ  ಬರುವಂತಹ ವಿವಿಧ ರೋಗಗಳು 
3)ಕುರಿಗಳನ್ನು ಕೊಬ್ಬಿಸುವ ವಿಧಾನ 
4)ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಹಿತಿ
5)ವಿವಿಧ ಔಷಧ ಉಪಚಾರಗಳು 
6)ಕುರಿ ಶಡ್ ನಿರ್ಮಾಣ
7)ಲೋನ್ ಗಳ ಮಾಹಿತಿ 
8)ಸಬ್ಸಿಡಿಗಳ ಮಾಹಿತಿ 
9) ಪ್ರಾಜೆಕ್ಟ್ ರಿಪೋರ್ಟ್ ಮಾಹಿತಿ 
10) ಮನೆಮದ್ದುಗಳ ಮಾಹಿತಿ 

 ಇನ್ನು ಇತರೆ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು 

 ಆಸಕ್ತರು ಕೂಡಲೇ ಕೆಳಗಡೆ ನಮೂದಿಸಿದ ಮೊಬೈಲ್ ನಂಬರ್ ಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಿ 
8660219375

.

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಇರುವ ಲೀಡ್ ಬ್ಯಾಂಕ್ ತರಬೇತಿ ಕೇಂದ್ರಗಳಲ್ಲಿ ತರಭೇತಿ ಆಯೋಜಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಲೀಡ್ ಬ್ಯಾಂಕ್ ಸಂಪರ್ಕಿಸಿ

]]>
Fri, 04 Jul 2025 19:35:40 +0530 shivuagrico
Gruhalakshmi amount&ಇಲ್ಲಿಯವರೆಗೂ ನಿಮಗೆ ಎಷ್ಟು ಗೃಹಲಕ್ಷ್ಮಿ ಹಣ ಜಮಾ ಆಗಿದೆ ಚೆಕ್ ಮಾಡಿ https://krushirushi.in/Gruhalakshmi-amount-2208 https://krushirushi.in/Gruhalakshmi-amount-2208 Gruhalakshmi amount-ಇಲ್ಲಿಯವರೆಗೂ ನಿಮಗೆ ಎಷ್ಟು ಗೃಹಲಕ್ಷ್ಮಿ ಹಣ ಜಮಾ ಆಗಿದೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Fri, 04 Jul 2025 14:39:00 +0530 shivuagrico
20ನೇ ಕಂತು ಸೇರಿದಂತೆ 2025 ನೇ ಸಾಲಿನ ಪಿಎಂ ಕಿಸಾನ್ ಕಂತುಗಳ ದಿನಾಂಕ ಪ್ರಕಟ&Pmkisan Kisan instalment dates https://krushirushi.in/Pmkisan-instalment-dates https://krushirushi.in/Pmkisan-instalment-dates 20ನೇ ಕಂತು ಸೇರಿದಂತೆ 2025 ನೇ ಸಾಲಿನ ಪಿಎಂ ಕಿಸಾನ್ ಕಂತುಗಳ ದಿನಾಂಕ ಪ್ರಕಟ-Pmkisan Kisan instalment dates

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬ‌ರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 20ನೇ ಕಂತು ಇದೇ ಜುಲೈ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 20ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 20th instalment date

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Fri, 04 Jul 2025 07:17:43 +0530 shivuagrico
Rain alert&ಈ 9 ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಮಳೆ ಸುರಿಯಲಿದೆ https://krushirushi.in/Rain-alert-2206 https://krushirushi.in/Rain-alert-2206 Rain alert-ಈ 9 ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಮಳೆ ಸುರಿಯಲಿದೆ

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ.


ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ಜುಲೈ 6ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಬಹುದು. ತೋಟಗಳಿಗೆ ಔಷಧಿ ಸಿಂಪಡಿಸಲು ಇಡೀ ದಿನ ಮಳೆ ಬಿಟ್ಟು ಸಿಗುವ ಸಾಧ್ಯತೆ ಕಾಣಿಸುತ್ತಿಲ್ಲ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.


ಈಗಿನಂತೆ ಜುಲೈ 5ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ನಂತರವೂ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗ ಒಂದೆರಡು ಕಡೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ, ಯಾದಗಿರಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.


ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಜುಲೈ 4ರಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆ(Rain)ಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆಯಾಗಿದೆ? ಆಗುಂಬೆ, ಕದ್ರಾ, ಜೋಯ್ಡಾ, ಗೇರುಸೊಪ್ಪ, ಸಿದ್ದಾಪುರ, ಮೂಡುಬಿದಿರೆ, ಕಾರ್ಕಳ, ಲೋಂಡಾ, ಶೃಂಗೇರಿ, ಕಮ್ಮರಡಿ, ಕೊಪ್ಪ, ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ, ಅಂಕೋಲಾ, ಶಿರಾಲಿ, ಯಲ್ಲಾಪುರ, ಬಂಟವಾಳ, ಮಂಕಿ, ಚಿಂಚೋಳಿ, ಹುಮ್ನಾಬಾದ್, ಸೋಮವಾರಪೇಟೆ, ಜಯಪುರ, ಭಾಗಮಂಡಲ,ತ್ಯಾಗರ್ತಿ, ನಾಪೋಕ್ಲು, ಕಳಸ, ಸೇಡಂ, ಮಂಠಾಳ, ಚಿತ್ತಾಪುರ, ಖಾನಾಪುರ, ಕುಮಟಾ, ಉಡುಪಿ, ಕೋಟಾ, ಗೋಕರ್ಣ, ಮುಲ್ಕಿ, ಹಳಿಯಾಳ, ಕಾರವಾರ, ಬೀದರ್, ಕೂಡಲಸಂಗಮ, ವಿರಾಜಪೇಟೆ, ಬಾಳೆಹೊನ್ನೂರು, ಕೊಟ್ಟಿಗೆಹಾರ, ಕೊಟ್ಟೂರು, ಹುಂಚದಕಟ್ಟೆ, ಕಂಪ್ಲಿಯಲ್ಲಿ ಮಳೆಯಾಗಿದೆ.

]]>
Thu, 03 Jul 2025 18:51:12 +0530 shivuagrico
Input subsidy for croploss&ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ https://krushirushi.in/Input-subsidy-for-croploss-2205 https://krushirushi.in/Input-subsidy-for-croploss-2205 Input subsidy for croploss-ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.


ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್‌ ಸಬ್ಸಿಡಿ ರೈತರ ಬ್ಯಾಂಕ್‌ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Thu, 03 Jul 2025 07:10:40 +0530 shivuagrico
Crop insurance&ಈ ಜಿಲ್ಲೆಸ ರೈತರ ಖಾತೆಗೆ ಬಾಕಿ 30 ಕೋಟಿ ಬೆಳೆವಿಮೆ ಹಣ ಜಮಾ https://krushirushi.in/Crop-insurance-2202 https://krushirushi.in/Crop-insurance-2202 Crop insurance-ರೈತರ ಬಾಕಿ 30 ಕೋಟಿ ಬೆಳೆವಿಮೆ ಹಣ ರೈತರ ಖಾತೆಗೆ ಜಮಾ


ಧಾರವಾಡದ ರೈತರಿಗೆ 30 ಕೋಟಿ ಬೆಳೆವಿಮಾ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.


ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು
ಧಾರವಾಡ ಜಿಲ್ಲೆಯ 2024ರ ಖಾರೀಫ್ ಹಂಗಾಮಿನಲ್ಲಿ ಹೆಸರು ಬೆಳೆಗೆ ಬೆಳೆ ವಿಮಾ ಮಾಡಿಸಿದ ಕುಂದಗೋಳ ಹಾಗೂ ಶಿರಗುಪ್ಪಿ ಹೋಬಳಿಗಳ ರೈತರಿಗೆ ಅತಿಯಾದ ಮಳೆಯಿಂದ ಹಾನಿಗೊಳಗಾದ ಈ ಬೆಳೆಗೆ ಈಗ ಅಂದಾಜು 30 ಕೋಟಿ ಹಣವನ್ನು  ವಿಮೆ ಬಿಡುಗಡೆಗೆ ಆದೇಶ ನೀಡಲಾಗಿದ್ದು ಈ ಮೊದಲು ಈ ಬೆಳೆಗಳಿಗೆ ವಿವಿಧ ಕಾರಣಗಳಿಂದ  ವಿಮಾ ಬಿಡುಗಡೆಯಾಗಿರಲಿಲ್ಲ. 

ಮುಖ್ಯವಾಗಿ ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿಯವರು  ತಾಂತ್ರಿಕ ಕಾರಣಗಳೊಂದಿಗೆ ಬೆಳೆ ಕಟಾವು ಸಮೀಕ್ಷೆ ಪ್ರಕಾರ ವಿಮೆ ನೀಡಲು ಮಾನದಂಡಗಳು ಹೊಂದಾಣಿಕೆಯಾಗುತ್ತಿಲ್ಲವೆಂದು ನಿರಾಕರಿಸಿದ್ದರು. ನಂತರ ನಾನು  ಜಿಲ್ಲಾಧಿಕಾರಿಗಳಿಗೆ ಈ ವಿಷಯವನ್ನು ವಿಮಾ ಪರಿಹಾರದ ಜಿಲ್ಲಾ ಮಟ್ಟದ ಜಂಟಿ ಸಮಿತಿಯಲ್ಲಿ (DLJC) ತೆಗೆದುಕೊಂಡು  ಇತ್ಯರ್ಥಗೊಳಿಸಲು ಸೂಚಿಸಿದ್ದೆನು. ಅದಕ್ಕೂ ವಿಮಾ ಕಂಪನಿ ವಿವಿಧ ಹಂತದಲ್ಲಿ ಅಪೀಲು ಮಾಡಿ ಅಡತಡೆಗಳೆನ್ನು ಉಂಟು ಮಾಡಿತ್ತು, ಕೊನೆಗೆ ಕೇಂದ್ರ ಕೃಷಿ ಸಚಿವ ಶ್ರೀ ಶಿವರಾಜ್‌ಸಿಂಗ್ ಚವ್ಹಾಣ ಅವರ ನೇತೃತ್ವ ಹಾಗೂ ಹಣಕಾಸು ಕಾರ್ಯದರ್ಶಿಗಳೊಂದಿಗೆ ನಾನು ಸಭೆ ನಡೆಸಿ ಅವರಿಗೆ ವಿವರವಾಗಿ ಮನದಟ್ಟು ಮಾಡಿ ಧಾರವಾಡ ಜಿಲ್ಲೆಯ ಎರೆಡು ಹೋಬಳಿಯ ಹೆಸರು ಬೆಳೆಗೆ ವಿಮೆ ಮಾಡಿದ ರೈತರಿಗೆ ವಿಮೆ ಬಿಡುಗಡೆಗೆ ಮಾಡುವಂತೆ ಕೋರಿದ್ದೆನು.


ಈಗ ವಿಮೆ ಬಿಡುಗಡೆ ಆಗಿದ್ದು ಅತೀ ಶೀಘ್ರದಲ್ಲೇ ರೈತರ ಖಾತೆಗಳಿಗೆ ನೇರವಾಗಿ ಹಣ ಜಮೆಯಾಗಲಿದೆ
ಆದರೆ ಕೆಲ ಮಧ್ಯವರ್ತಿಗಳು ತಾವೇ ವಿಮೆ ಬಿಡುಗಡೆ ಮಾಡಿಸಿರುವುದಾಗಿ ಹೇಳಿ ರೈತರಿಂದ ಅಧಿಕ ಹಣ ಪಡೆಯುವ ದಾರಿ ತಪ್ಪಿಸುವ ವ್ಯವಸ್ಥಿತ ಜಾಲವೇ ಇದೆ ಎಂಬುದು ನನ್ನ ಗಮನಕ್ಕೆ ಬಂದಿದ್ದು, ರೈತರು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ಯಾರಿಗೂ ತಮ್ಮ ಖಾತೆಯಿಂದ ಹಣ ನೀಡುವ ಅವಶ್ಯಕತೆ ಇಲ್ಲ. ನಮ್ಮ ಸರ್ಕಾರದ ಆಡಳಿತದಲ್ಲಿ ರೈತ ಮತ್ತು ಸರ್ಕಾರದ ನಡುವೆ ಯಾವುದೇ ಮಧ್ಯವರ್ತಿಗಳಿಗೆ ಅವಕಾಶವಿಲ್ಲ.
ಯಾರಾದರೂ ಹಣ ಕೇಳಿದರೆ ನಮ್ಮ ಕಛೇರಿಗೆ ಅಥವಾ ಜಿಲ್ಲಾಧಿಕಾರಿ, ಕೃಷಿ ಅಧಿಕಾರಿಗಳ ಗಮನಕ್ಕೆ ತನ್ನಿ.


ವಿಮೆ ಹಣ ದೊರಕಿ ರೈತರಿಗೆ ನೆರವಾಗುವಂತಹ ಯೋಜನೆ ರೂಪಿಸಿ ರೈತರ ಬೆನ್ನಿಗೆ ನಿಂತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ   ಅದನ್ನು ಸಕಾರಾತ್ಮಕ ಬದಲಾವಣೆಗಳೊಂದಿಗೆ ಅನುಷ್ಠಾನಗೊಳಿಸುತ್ತಿರುವ ಕೇಂದ್ರ ಕೃಷಿ ಸಚಿವ  ಶಿವರಾಜ್‌ಸಿಂಗ್ ಚವ್ಹಾಣ್  ಅವರಿಗೆ ಧನ್ಯವಾದಗಳು ತಿಳಿಸಿದ್ದಾರೆ.

 ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Wed, 02 Jul 2025 10:24:31 +0530 shivuagrico
Bele vime&ಈ ಜಿಲ್ಲೆಯ 71,177 ರೈತರಿಗೆ ಬಾಕಿ 156.14 ಕೋಟಿ ಬೆಳೆವಿಮೆ ಜಮಾ,ನಿಮಗೆಷ್ಟು ಜಮಾ ಚೆಕ್ ಮಾಡಿ https://krushirushi.in/Bele-vime-2201 https://krushirushi.in/Bele-vime-2201 Bele vime-ಈ ಜಿಲ್ಲೆಯ 71,177 ರೈತರಿಗೆ 156.14 ಕೋಟಿ ಬೆಳೆವಿಮೆ ಜಮಾ,ನಿಮಗೆಷ್ಟು ಜಮಾ ಚೆಕ್ ಮಾಡಿ

ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.

 ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Wed, 02 Jul 2025 06:49:22 +0530 shivuagrico
ಜಿಲ್ಲಾವಾರು,ಬೆಳೆವಾರು ಹವಾಮಾನ ಆಧಾರಿತ ಬೆಳೆವಿಮೆ ದಿನಾಂಕ ಬಿಡುಗಡೆ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ&Weather based crop insurance system https://krushirushi.in/Weather-based-crop-insurance-system-2200 https://krushirushi.in/Weather-based-crop-insurance-system-2200 ಜಿಲ್ಲಾವಾರು,ಬೆಳೆವಾರು ಬೆಳೆವಿಮೆ ದಿನಾಂಕ ಬಿಡುಗಡೆ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ-crop insurance last date  


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2025-26" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ

ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ

]]>
Tue, 01 Jul 2025 14:47:49 +0530 shivuagrico
ಬೆಳೆ ಸಮಿಕ್ಷೆ ವರದಿಯಲ್ಲಿ approved ಎಂದು ಇದ್ದವರಿಗೆ ಮಾತ್ರ ಬೆಳೆವಿಮೆ,ಬೆಳೆಹಾನಿ ಪರಿಹಾರ,ನಿಮ್ಮ ಸ್ಟೇಟಸ್ ಒಮ್ಮೆ ಚೆಕ್ ಮಾಡಿಕೊಳ್ಳಿ&Crop survey report https://krushirushi.in/Crop-survey-report-2199 https://krushirushi.in/Crop-survey-report-2199 ಬೆಳೆ ಸಮಿಕ್ಷೆ ವರದಿಯಲ್ಲಿ approved ಎಂದು ಇದ್ದವರಿಗೆ ಮಾತ್ರ ಬೆಳೆವಿಮೆ,ಬೆಳೆಹಾನಿ ಪರಿಹಾರ,ನಿಮ್ಮ ಸ್ಟೇಟಸ್ ಒಮ್ಮೆ ಚೆಕ್ ಮಾಡಿಕೊಳ್ಳಿ-Crop survey report

ಬೆಳೆ ಸಮೀಕ್ಷೆ(Bele samikshe) ಮೂಲಕ ಸಂಗ್ರಹಿಸಲಾದ ಬೆಳೆ
ಮಾಹಿತಿ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ ದರ್ಶಕ ಮೊಬೈಲ್ ಆ್ಯಪ್(Bele darshaka App)ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ(Crop survey portal) ಮೂಲಕ ಆಕ್ಷೇಪಣೆ ಸಲ್ಲಿಸಬಹುದು. 

ಬೆಳೆ ಸಮೀಕ್ಷೆ ದತ್ತಾಂಶವನ್ನು ಬೆಳೆವಿಮೆ(Bele vime), ಬೆಂಬಲ ಬೆಲೆ ಯೋಜನೆಯಡಿ(MSP) ಬೆಳೆ ಮಾರಾಟ ಮಾಡಲು, ಬೆಳೆ ನಷ್ಟ ಪರಿಹಾರ(bele hani) ಹಾಗೂ ಇತರ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಳಕೆ ಮಾಡಲಾಗುವುದು. ಆದ್ದರಿಂದ ರೈತರು ತಾವು ಬೆಳೆದ ಬೆಳೆ ಹಾಗೂ ಬೆಳೆ ಸಮೀಕ್ಷೆಯಲ್ಲಿ (crop survey)ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಖಾತ್ರಿಪಡಿಸಿಕೊಳ್ಳಬೇಕು. ಒಂದು ವೇಳೆ ಭಿನ್ನವಾಗಿದ್ದಲ್ಲಿ, ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ನಂತರದ ಆಕ್ಷೇಪಣೆ ಸ್ವೀಕರಿಸಲಾಗುವುದಿಲ್ಲ.

ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಗೂಗಲ್ ಪ್ಲೇ ಸ್ಟೋರ್ ಮೂಲಕ ಅಥವಾ https://play.google.com/store/apps/details?id=com.crop.offcskharif_2021  ಲಿಂಕ್ ಮೇಲೆ ಕ್ಲಿಕ್ ಮಾಡಿ bele Darshaka application ಇನ್ಸ್ ಸ್ಟಾಲ್ ಮಾಡಿಕೊಳ್ಳಬಹುದು. 

ನಂತರ ರೈತ select ಮಾಡಿ

ನಂತರ ವರ್ಷ,ಋುತು, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ.

ನಂತರ ಸರ್ವೇ ನಂಬರ್ ಹಾಕಿ,ಹಿಸ್ಸಾಆಯ್ಕೆ ಮಾಡಿ,ಸಮೀಕ್ಷೆಯ  ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ

ನಂತರ ಬೆಳೆವಿವರ ವೀಕ್ಷಿಸಿ ಮೇಲೆ ಕ್ಲಿಕ್ ಮಾಡಿ

ನಂತರ photo ಮೇಲೆ ಕ್ಲಿಕ್ ಮಾಡಿದರೆ ನೀವು ಬೆಳೆದ ಬೆಳೆ ಹಾಗೂ ಫೋಟೊ ಅಪ್ಲೊಡ್ ಸರಿಯಾಗಿರುವುದನ್ನು ಪರಿಕ್ಷೀಸಿ.

ಬೆಳೆ ಸಮಿಕ್ಷೆ ಸರಿಯಾಗಿರದಿದ್ದರೆ, ಆಕ್ಷೇಪಣೆ ಸಲ್ಲಿಸಿದರೆ, ಪುನಃ ಬೆಳೆ ಸಮಿಕ್ಷೆ ಮಾಡಿ ಸರಿಪಡಿಸಲು ಅವಕಾಶವಿರುತ್ತದೆ.

ಏನಿದು ಬೆಳೆ ದರ್ಶಕ ಆ್ಯಪ್?

ಈ ಅಪ್ಲಿಕೇಶನ್ ಮಾಡಿದ ಉದ್ದೇಶ ಬೆಳೆ ಸಮೀಕ್ಷೆಯನ್ನು (Crop survey)ನೋಡಲು.. ಇದರಲ್ಲಿ ನೀವು ಅಪ್‌ಲೋಡ್ ಮಾಡಿದ ಚಿತ್ರಗಳನ್ನು ಮತ್ತು ಸಮೀಕ್ಷೆ ಮಾಡಿದ ಸರ್ವೇಯರ್ ವಿವರಗಳನ್ನು ನೋಡಬಹುದು.

ತಮ್ಮ ಮೊಬೈಲ್ ಮೂಲಕ ಬೆಳೆಗಳ ಸಮೀಕ್ಷೆ(Bele samikshe) ಮಾಡಬಹುದು. ಅಥವಾ ನೆರೆಯ ಖಾಸಗಿ ವ್ಯಕ್ತಿಗಳ (Private resident) ಮೊಬೈಲ್ ಮೂಲಕ ಜಮೀನುಗಳ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ನಿಮ್ಮ ಜಮೀನಿನ ಸರ್ವೆ ನಂಬರ್(Survey number) ಮತ್ತು ಜಮೀನಿನ ಫೊಟೋ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಮೊಬೈಲ್ ನಲ್ಲಿ Bele darshak app ಮೂಲಕ ಕ್ಷಣಾರ್ಧದಲ್ಲಿ  ನೋಡಬಹುದು. ಒಂದು ವೇಳೆ ತಪ್ಪಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು. 

ಬೆಳೆ ದರ್ಶಕ್ ಆ್ಯಪ್(bele darshaka app) ಇನ್ಸ್ ಸ್ಟಾಲ್ ಮಾಡಿಕೊಂಡ ನಂತರ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಇನ್ನಿತರ ಮಾಹಿತಿ ನಮೂದಿಸಬೇಕು. ಬೆಳೆ ದರ್ಶಕ್ ಆ್ಯಪ್(Bele darshaka application) ಮೂಲಕ ಜಮೀನಿನಲ್ಲಿ ಬೆಳೆ ಸಮೀಕ್ಷೆ (Bele samikshe)ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ (Crop survey)ಸಮಯದಲ್ಲಿ ತೆಗೆಯಲಾದ ಜಿಪಿಎಸ್ ಆಧಾರಿತ (GPS Photo)ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ಅಲ್ಲದೆ ರೈತರ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ, (Mobile number)ರೈತರು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ನೋಡಬಹುದು.

 ಒಂದು ವೇಳೆ ಮಾಹಿತಿ ತಪ್ಪಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು.ಮೇಲ್ವಿಚಾರಕರು ಸೂಕ್ತ ಬೆಳೆಗಳನ್ನು ದಾಖಲಿಸಿ ರೈತರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುತ್ತಾರೆ. ಇನ್ನೇಕೆ ತಡ ಒಮ್ಮೆ ನಿಮ್ಮ ಬೆಳೆ ಸಮೀಕ್ಷೆಯಲ್ಲಿ ಎಲ್ಲಾ ಸರ್ವೆ ನಂಬರ್, ಮಾಹಿತಿ ಹಾಗೂ ಫೋಟೋ ಸರಿಯಾಗಿ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಡಿ

]]>
Tue, 01 Jul 2025 07:10:47 +0530 shivuagrico
ಇಕೆವೈಸಿ ಆದವರಿಗೆ ಮಾತ್ರ ಪಿಎಂ ಕಿಸಾನ್ 20ನೇ ಕಂತು, ಈಗಾಗಲೇ ಇಕೆವೈಸಿ ಆಗಿದ್ದರೂ ಇನ್ನೊಂದು ಬಾರಿ ಇಕೆವೈಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ&Pmkisan ekyc Status https://krushirushi.in/Pmkisan-ekyc-status-2198 https://krushirushi.in/Pmkisan-ekyc-status-2198 ಇಕೆವೈಸಿ ಆದವರಿಗೆ ಮಾತ್ರ ಪಿಎಂ ಕಿಸಾನ್ 20ನೇ ಕಂತು, ಈಗಾಗಲೇ ಇಕೆವೈಸಿ ಆಗಿದ್ದರೂ ಇನ್ನೊಂದು ಬಾರಿ ಇಕೆವೈಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ-Pmkisan ekyc Status

ಪಿ.ಎಂ.ಕಿಸಾನ್ ಯೋಜನೆಯಡಿ ರೈತ ಬಂಧುಗಳು ಆರ್ಥಿಕ ನೆರವು ಪಡೆಯಲು e-KYC ಕಡ್ಡಾಯಗೊಳಿಸಲಾಗಿದೆ. e-KYC ಮಾಡಿಸಲು ಬಾಕಿ ಇರುವ ರೈತರು ಕೂಡಲೇ e-KYC ಮಾಡಿಸಿಕೊಳ್ಳಲು ಕೋರಿದೆ.


ಸದ್ಯದಲ್ಲೇ ಪಿಎಂ ಕಿಸಾನ್ ಯೋಜನೆಯ 20 ನೇ ಕಂತು ಬಿಡುಗಡೆಯಾಗುತ್ತಿದ್ದು, ಇಕೆವೈಸಿ ಆದವರಿಗೆ ಮಾತ್ರ ಜಮಾ ಆಗಲಿದೆ.ಆದ್ದರಿಂದ ಈಗಾಗಲೇ ಇಕೆವೈಸಿ ಆಗಿದ್ದರೂ ಸಹ ಇನ್ನೊಂದು ಬಾರಿ ಈ ಕೆಳಗಿನ 3 ವಿಧಾನಗಳ ಮೂಲಕ ಇಕೆವೈಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ.

ವಿಧಾನ 1.

OTP ಆಧಾರಿತ ಇಕೆವೈಸಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/aadharekyc.aspx

ನಂತರ ನಿಮ್ಮ ಆಧಾರ್ ನಂಬರ್ ಹಾಕಿ search ಮೇಲೆ ಕ್ಲಿಕ್ ಮಾಡಿ

ಈಗಾಗಲೇ ಇಕೆವೈಸಿ ಆಗಿದ್ದರೆ,Ekyc is already done ಎಂದು ತೋರಿಸುತ್ತದೆ.

ಇಲ್ಲದಿದ್ದರೆ ನಿಮ್ಮ ಮೊಬೈಲ್ ನಂಬರ್ ಹಾಕಿ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ ಇಕೆವೈಸಿ ಮಾಡಿಕೊಳ್ಳಿ

ವಿಧಾನ 2.

Biometric ಆಧಾರಿತ ಇಕೆವೈಸಿ

ನಿಮಗೆ OTP ಬರದಿದ್ದರೆ ನಾಗರಿಕ ಸೇವಾ ಕೇಂದ್ರ ಅಥವಾ ಗ್ರಾಮಒನ್ ಗೆ ಹೋಗಿ ನಿಮ್ಮ ಹೆಬ್ಬೆಟ್ಟನ್ನು ಒತ್ತಿ ಇಕೆವೈಸಿ ಮಾಡಿಸಿಕೊಳ್ಳಿ

ವಿಧಾನ 3.

ಮುಖಚರ್ಯೆ(Face authentication) ಆಧಾರಿತ ಇಕೆವೈಸಿ

ಈ ಕೆಳಗಿನ ಲಿಂಕ್ ಮೋಲೆ ಕ್ಲಿಕ್ ಮಾಡಿ ಅಪ್ಲಿಕೇಶನ್ ಡೌನ್ಲೊಡ್ ಮಾಡಿಕೊಳ್ಳಿ

https://play.google.com/store/apps/dev?id=6767333309690298459

ನಂತರ ನಿಮ್ಮ ಮುಖ ಸ್ಕ್ಯಾನ್ ಮಾಡಿ Ekyc ಮಾಡಿ

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ಕಛೇರಿಯನ್ನು ಸಂಪರ್ಕಿಸಿ ಇಕೆವೈಸಿ ಮಾಡಿಸಿಕೊಳ್ಳಿ,ಈ ಮಾಹಿತಿಯನ್ನು ಇತರೆ ರೈತರಿಗೂ ಹಂಚಿಕೊಳ್ಳಿ

]]>
Mon, 30 Jun 2025 19:17:32 +0530 shivuagrico
Belevime last date&ಈ ಬೆಳೆಗಳಿಗೆ ಬೆಳೆವಿಮೆ ಕಟ್ಟಲು ಜು.31 ಕೊನೆಯ ದಿನಾಂಕ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ&crop insurance last date https://krushirushi.in/Belevime-last-date-crop-insurance-last-date-2197 https://krushirushi.in/Belevime-last-date-crop-insurance-last-date-2197 ಈ ಬೆಳೆಗಳಿಗೆ ಬೆಳೆವಿಮೆ ಕಟ್ಟಲು ಜು.31 ಕೊನೆಯ ದಿನಾಂಕ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ-crop insurance last date  

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2025-26" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ

ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ

]]>
Mon, 30 Jun 2025 12:39:49 +0530 shivuagrico
ಪಿಎಂ ಕಿಸಾನ್ 20ನೇ ಕಂತಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್,ಈ ಪಟ್ಟಿಯಲ್ಲಿರುವ 7 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ&pmkisan ineligible list https://krushirushi.in/Pmkisan-ineligible-list-2196 https://krushirushi.in/Pmkisan-ineligible-list-2196 ಪಿಎಂ ಕಿಸಾನ್ 20ನೇ ಕಂತಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್,ಈ ಪಟ್ಟಿಯಲ್ಲಿರುವ 7 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ-pmkisan ineligible list

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ನೋಂದಾಯಿಸಿದ್ಧ ರಾಜ್ಯದ 7 ಲಕ್ಷಕ್ಕೂ ಅಧಿಕ ರೈತರನ್ನು ಅನರ್ಹಗೊಳಿಸಲಾಗಿದೆ.


ರಾಜ್ಯದಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಆರಂಭವಾದ ಒಂದು ವರ್ಷದಲ್ಲಿ 53.81 ಲಕ್ಷಕ್ಕೂ ಅಧಿಕ ರೈತರು ನೋಂದಣಿ ಮಾಡಿಸಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದರು.

ಇವರ ಪೈಕಿ 7 ಲಕ್ಷಕ್ಕೂ ಅಧಿಕ ರೈತರನ್ನು ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಅನರ್ಹಗೊಳಿಸಲಾಗಿದೆ.

ಭೂ ದಾಖಲೆಗಳ ಕೊರತೆ, ಇ-ಕೆವೈಸಿ ಸಮಸ್ಯೆ, ತೆರಿಗೆ ಪಾವತಿದಾರರು, ಸರ್ಕಾರಿ ನೌಕರಿ ಹೊಂದಿರುವುದು, ಸಾಂವಿಧಾನಿಕ ಹುದ್ದೆಗಳಲ್ಲಿ ಕಾರ್ಯನಿರ್ವಹಣೆ ಸೇರಿದಂತೆ ಅನೇಕ ಕಾರಣಗಳಿಂದ ಹಂತ ಹಂತವಾಗಿ ಪರಿಶೀಲನೆ ನಡೆಸಿ ಸುಮಾರು 7 ಲಕ್ಷ ರೈತರನ್ನು ಅನರ್ಹಗೊಳಿಸಲಾಗಿದೆ.

2018ರಲ್ಲಿ ಯೋಜನೆ ಆರಂಭವಾದ ಸಂದರ್ಭದಲ್ಲಿ 19,819 ರೈತರು ನೋಂದಾಯಿಸಿದ್ದು, 2019-20 ರಲ್ಲಿ 53,81,184 ರೈತರು ನೋಂದಾಯಿಸಿದ್ದರು. ಅರ್ಹರಲ್ಲದವರು ಕೂಡ ಹೆಸರು ನೋಂದಾಯಿಸಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದರಿಂದ ಪರಿಶೀಲನೆ ಕಾರ್ಯ ಆರಂಭಿಸಲಾಗಿದ್ದು, ಈಗ 47.50 ಲಕ್ಷ ರೈತರು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ.

ರೈತರ ನೋಂದಣಿ ಕಾರ್ಯ ನಿರಂತರವಾಗಿ ನಡೆಯುವುದರಿಂದ ಪ್ರತಿ ಕಂತು ವಿತರಣೆಯ ಸಂದರ್ಭದಲ್ಲಿ ರೈತರ ಸಂಖ್ಯೆ ಹೆಚ್ಚು ಕಡಿಮೆಯಾಗುತ್ತದೆ. ಅರ್ಹರನ್ನು ಸೇರಿಸುವುದು, ಅನರ್ಹರನ್ನು ಕೈಬಿಡುವ ಪ್ರಕ್ರಿಯೆ ನಿರಂತರವಾಗಿರುತ್ತದೆ.

ಆಧಾರ್ ಮತ್ತು ಪಹಣಿಯೊಂದಿಗೆ ಫ್ರೂಟ್ಸ್ ಐಡಿ ತಂತ್ರಾಂಶದಲ್ಲಿ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿ ಇ-ಕೆವೈಸಿಯೊಂದಿಗೆ ಕಿಸಾನ್ ಸಮ್ಮಾಣ್ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಜಮೀನಿನ ಮಾಲೀಕರು ನಿಧನರಾಗಿದ್ದಲ್ಲಿ ಇತರೆ ವಾರಸುದಾರರು ಪೌತಿ ಖಾತೆ ಮಾಡಿಸಿದರೆ ಯೋಜನೆಗೆ ಅರ್ಹರಾಗುತ್ತಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2019 ರ ನಂತರ ಜಮೀನು ಖರೀದಿಸಿದವರು ಮತ್ತು ತಂದೆಯ ಜಮೀನನ್ನು ಭಾಗ ಮಾಡಿಕೊಂಡಿದ್ದರೆ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಲಾಗಿದೆ. ಒಂದು ವೇಳೆ ತಾಂತ್ರಿಕ ದೋಷ, ಇ-ಕೆವೈಸಿ ಸಮಸ್ಯೆಯಿಂದ ಯಾವುದೇ ರೈತರ ಹೆಸರು ಪಟ್ಟಿಯಿಂದ ಹೊರಗುಳಿದಿದ್ದರೆ ಮತ್ತೊಮ್ಮೆ ಪರಿಶೀಲನೆಗೆ ಒಳಪಡಿಸಲು ಅವಕಾಶವಿದೆ. ಈ ಯೋಜನೆಯಡಿ ವಾರ್ಷಿಕ 6,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. 3 ಕಂತುಗಳಲ್ಲಿ 4 ತಿಂಗಳಿಗೊಮ್ಮೆ ನೇರವಾಗಿ ರೈತರ ಖಾತೆಗೆ 2 ಸಾವಿರ ರೂ. ವರ್ಗಾಯಿಸಲಾಗುವುದು.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 20ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 20th instalment eligible list

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

Pmkisan 20th instalment ineligible list-ಪಿಎಂ ಕಿಸಾನ್ 19ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Mon, 30 Jun 2025 06:18:59 +0530 shivuagrico
Government property&ವಕ್ಫ್ ಆಯ್ತು,ಈಗ ರೈತರ ಪಹಣಿಗಳಲ್ಲಿ ಸರ್ಕಾರ ಎಂದು ನಮೂದು,ನಿಮ್ಮ ಪಹಣಿಯನ್ನೊಮ್ಮೆ ಚೆಕ್ ಮಾಡಿಕೊಂಡು ಬಿಡಿ https://krushirushi.in/Government-property-2195 https://krushirushi.in/Government-property-2195

Government property-ವಕ್ಫ್ ಆಯ್ತು,ಈಗ ರೈತರ ಪಹಣಿಗಳಲ್ಲಿ ಸರ್ಕಾರ ಎಂದು ನಮೂದು,ನಿಮ್ಮ ಪಹಣಿಯನ್ನೊಮ್ಮೆ ಚೆಕ್ ಮಾಡಿಕೊಂಡು ಬಿಡಿ


ಪಹಣಿಯಲ್ಲಿ ‘ಸರ್ಕಾರ’ ಎಂದು ನಮೂದಾಗಿರುವ ಕಾರಣಕ್ಕೆ ರೈತರಿಗೆ ಮೂರು ದಶಕಗಳಿಂದ ಕೃಷಿಗೆ ಸಂಬಂಧಿಸಿದ ಯಾವುದೇ ಸರ್ಕಾರಿ ಸೌಲಭ್ಯಗಳು ದೊರೆಯುತ್ತಿಲ್ಲ.

ನೀರಿನ ಕರ ಕಟ್ಟದಿರುವುದಕ್ಕೆ ಸರ್ಕಾರ ರೈತರ ಹೆಸರಿನ ಜಮೀನನ್ನು ತನ್ನದು ಎಂಬ ರೀತಿಯಲ್ಲಿ ಸರ್ಕಾರ ಎಂದು ಬರೆದುಕೊಂಡಿದೆ. ಇದರಿಂದ ರೈತರು ಕೇವಲ ಅದನ್ನು ಸಾಗುವಳಿ ಮಾಡಿ, ಫಸಲು ತೆಗೆಯಬಹುದು. ಆದರೆ ಅದರ ಮೇಲೆ ರೈತರಿಗೆ ಹಕ್ಕಿಲ್ಲದಂತಾಗಿದೆ. ಸಾಲ ಸೌಲಭ್ಯ ಸೇರಿದಂತೆ ಸರ್ಕಾರದ ಯಾವ ಯೋಜನೆಗಳು ಸಿಗದಂತಾಗಿದೆ.

ನಿಮಗೆ ಗೊತ್ತಿಲ್ಲದೇ ಹಾಗೆ ನಿಮ್ಮ ಪಹಣಿಯಲ್ಲಿ(RTC) ಅವರ ಹೆಸರು ಹಾಕಿದ್ದಾರೆ ಎಂಬುದನ್ನು ರೈತರು ಒಮ್ಮೆ ಪರಿಶೀಲಿಸಿ. ಈ ಕೆಲಸವನ್ನು ಪ್ರತಿಯೊಂದು ರೈತರು ಆದಷ್ಟು ಬೇಗ ಮಾಡಬೇಕು. ಈ ಮಾಹಿತಿ ನಿಮ್ಮ ಕಾನೂನು ಹೋರಾಟಕ್ಕೆ ನಿರ್ಣಾಯಕ ಹಾಗೂ ಸಾಕ್ಷ್ಯ ಸಂಗ್ರಹಿಸಲು ಅಗತ್ಯವಾದ ಪ್ರಕ್ರಿಯೆ ಆಗಿರುತ್ತದೆ. ಆದ್ದರಿಂದ ಇಂದೇ ನಿಮ್ಮ ಪಹಣಿಯ(Uthara) ಕಾಪಿ ಪಡೆದು ಪರಿಶೀಲನೆ ಮಾಡಿ, ಒಂದು ವೇಳೆ ಯಾರಾದರು ಎಂದು ನಮೂದಿಸಲಾಗಿದ್ದಲ್ಲಿ ಕೂಡಲೇ ಜಮೀನಿನ ದಾಖಲೆ(Land records) ಹಾಗೂ ಪಹಣಿಯೊಂದಿಗೆ ತಹಶಿಲ್ದಾರ್ ಅಥವಾ ಜಿಲ್ಲಾದಿಕಾರಿಗಳಿಗೆ ದೂರು ಸಲ್ಲಿಸಿ

ನಿಮ್ಮ ಪಹಣೆಯಲ್ಲಿ(pahani) ಯಾರ ಹೆಸರಿದೆ ಎಂದು ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಲಿಂಕ್ ಮೋಲೆ ಕ್ಲಿಕ್ ಮಾಡಿ

https://landrecords.karnataka.gov.in/Service2/

 ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ

  ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ

ನಂತರ view ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ

ಪಹಣೆಯಲ್ಲಿ ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.

ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.

]]>
Sun, 29 Jun 2025 18:37:01 +0530 shivuagrico
Breaking News&ರೈತರ 300 ಕೋಟಿ ಬಾಕಿ ಸಾಲಮನ್ನಾ&ಸಿಎಂ ಸಿದ್ದರಾಮಯ್ಯ&Bele sala manna https://krushirushi.in/Bele-sala-manna-2193 https://krushirushi.in/Bele-sala-manna-2193 Breaking News-ರೈತರ 300 ಕೋಟಿ ಬಾಕಿ ಸಾಲಮನ್ನಾ-ಸಿಎಂ ಸಿದ್ದರಾಮಯ್ಯ-Bele sala manna

ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ರೈತರ ಸಾಲ ಮನ್ನಾ (Loan Waiver) ಮಾಡಿ ಬಾಕಿ ಉಳಿಸಿದ್ದ 300 ಕೋಟಿ ಹಣವನ್ನು ಕಾಂಗ್ರೆಸ್ ಸರ್ಕಾರ ಮುಂದಿನ ದಿನದಲ್ಲಿ ತೀರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಹಕಾರ ಸಚಿವ ಕೆಎನ್ ರಾಜಣ್ಣ ಅವರ 75ನೇ ವರ್ಷದ ‘ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಹೆಸರು ಪಡೆದುಕೊಂಡರು. ಆದರೆ ಬಾಕಿಯನ್ನು ನಮ್ಮ ಸರ್ಕಾರ ತೀರಿಸಬೇಕಾಗಿದೆ. ಹೆಸರು ಅವರಿಗೆ, ಹೊರೆ ಹೊತ್ತುಕೊಂಡಿದ್ದು ನಮ್ಮ ಸರ್ಕಾರ ಎಂದರು.

2018 ರಿಂದ ಇಲ್ಲಿಯವರೆಗೂ ಕರ್ನಾಟಕದಲ್ಲಿ ಯಾರಿಗೆಲ್ಲಾ ಎಷ್ಟು ಸಾಲ ಮನ್ನಾ ಆಗಿದೆ? ಹಾಗಾದರೆ ಯಾವ ಬಾಕಿ ರೈತರ ಸಾಲಮನ್ನಾ ಆಗಲಿದೆ,ಸಾಲಮನ್ನಾ ಆಗಲು ಬೇಕಾದ ದಾಖಲೆ ಹಾಗೂ ಅರ್ಹತೆಗಳೇನು? ಹೀಗೆ ಚೆಕ್ ಮಾಡಿ-Bele sala manna status 

2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಇದ್ದಾಗ ರಾಜ್ಯದ ರೈತರ ಸಾಲಮನ್ನಾ(Bele sala manna) ಮಾಡಿದ್ದರು.ಆದರೆ ಅದರಲ್ಲಿ ಕೇಲವು ರೈತರ ದಾಖಲೆಗಳ ಕೊರತೆಯಿಂದಾಗಿ ಬಾಕಿ ಉಳಿದ ಪ್ರಕರಣಗಳಲ್ಲಿ ದಾಖಲಾತಿಗಳನ್ನು ಸಲ್ಲಿಸಿದ ನಂತರ ಸಾಲಮನ್ನಾ ಆಗುತ್ತಿದೆ.ಹಾಗಾದರೆ ಈ ಲೇಖನದಲ್ಲಿ ಯಾವೆಲ್ಲಾ ದಾಖಲಾತಿಗಳು ಬೇಕಾಗಬಹುದು ಎಂದು ಚೆಕ್ ಮಾಡಬಹುದು.

ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

ನಂತರ "Revenue department/ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು"(Revenue department services)ಮೇಲೆ ಕ್ಲಿಕ್ ಮಾಡಿ

ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ"(farmer) ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು"(Submit)ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ(Crop loan wavier) ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ(Bele sala manna list) ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ

ನಂತರ "CLWS ರೈತನ ಅರ್ಹತೆ" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್(bank) select ಮಾಡಿ,ಸಲ್ಲಿಸು/Submit ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ(crop loan wavier) ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ

]]>
Sun, 29 Jun 2025 09:24:55 +0530 shivuagrico
Bele samikshe 2025&26:ಬೆಳೆ ಸಮೀಕ್ಷೆ ಮಾಡದಿದ್ದರೆ ಬೆಳೆವಿಮೆ,ಬೆಳೆಹಾನಿ ಪರಿಹಾರ ಸಿಗಲ್ಲ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಮಾಡಿ ಬೆಳೆ ಸಮೀಕ್ಷೆ https://krushirushi.in/Bele-samikshe-2025-26 https://krushirushi.in/Bele-samikshe-2025-26 Bele samikshe 2025-26:ಬೆಳೆ ಸಮೀಕ್ಷೆ ಮಾಡದಿದ್ದರೆ ಬೆಳೆವಿಮೆ,ಬೆಳೆಹಾನಿ ಪರಿಹಾರ ಸಿಗಲ್ಲ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಮಾಡಿ ಬೆಳೆ ಸಮೀಕ್ಷೆ

ಕರ್ನಾಟಕ ಸರ್ಕಾರ ಈ ಆಡಳಿತ ಮತ್ತು ಕೃಷಿ ಇಲಾಖೆ ಇವರ ಸಹಯೋಗದೊಂದಿಗೆ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ(crop survey) ರೈತರ ಆಪ್ ಬಿಡುಗಡೆ ಮಾಡಿದ್ದು, ರೈತರು ಗೂಗಲ್ ಪ್ಲೇ ಸ್ಟೋರ್ ನಿಂದ ಮುಂಗಾರು ರೈತರ ಬೆಳೆ ಸಮೀಕ್ಷೆ 2025-26 ಆಪ್ ಡೌನ್ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಅಪ್ಲೋಡ್ ಮಾಡಬಹುದು.

ರೈತ ಬಾಂಧವರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ಮುಂಗಾರು ರೈತರ ಬೆಳೆ ಸಮೀಕ್ಷೆ 2025-26 ಎಂಬ ಮೊಬೈಲ್‌ ಆ್ಯಪ್‌ ಗೂಗಲ್‌ ಪ್ಲೇಸ್ಟೋರ್‌ ನಿಂದ ಡೌನ್‌ಲೋಡ್‌ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.csk.farmer23_24.cropsurvey&pcampaignid=web_share

ಮೊದಲು Ekyc ಮೂಲಕ ಆಧಾರ್ ದೃಡಿಕರಿಸಿ ಮೇಲೆ ಕ್ಲಿಕ್ ಮಾಡಿ

ರೈತರ ಅಧಾರ್ ಕಾರ್ಡ ನಂಬರ್ ಅನ್ನು ಹಾಕಿ ಸಹಮತಿ ಇದೆ ಎಂದು ಟಿಕ್ ಮಾಡಿಕೊಂಡು ಕೆಳಗಡೆ ದೃಡೀಕರಣ ವಿಧಾನವನ್ನು ಆಯ್ಕೆ ಮಾಡಿ ಅಲ್ಲಿ OTP ಮೇಲೆ ಕ್ಲಿಕ್ ಮಾಡಿ "ಓಟಿಪಿ ಪಡೆಯಿರಿ" ಬಟನ್ ಮೇಲೆ ಕ್ಲಿಕ್ ಮಾಡಬೇಕು.

ತದನಂತರ ನಿಮ್ಮ ಮೊಬೈಲ್ ಗೆ ಬರುವ 6 ಅಂಕಿಯ OTP ಅನ್ನು ಹಾಕಿ ಸಲ್ಲಿಸಿ ಬಟನ್ ಮೇಲೆ ಕ್ಲಿಕ್ ಮಾಡಿದರೆ  ನಿಮ್ಮ ಎಲ್ಲಾ ವಿವರ ಇಲ್ಲಿ ತೋರಿಸುತ್ತದೆ. ಇಲ್ಲಿ ಮೊಬೈಲ್ ನಂಬರ್ ಹಾಕಿ "ಸಕ್ರಿಯಗೊಳಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ OTP ಅನ್ನು ನಮೂದಿಸಿ "ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ ಸಕ್ರಿಯಗೊಳಿಸಿಕೊಳ್ಳಬೇಕು.

ಇದಾದ ಬಳಿಕ ನಿಮ್ಮ ಸರ್ವೆ ನಂಬರ್ ಗಳು ಇಲ್ಲಿ ತೋರಿಸುತ್ತವೆ ನಂತರ ನಿಮ್ಮ ಜಮೀನಿನ್ನು ಭೇಟಿ ಮಾಡಿ ಒಂದು ಒಂದು ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ "ಬೆಳೆ ವಿವರ ದಾಖಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಪ್ರಸ್ತುತ ಬೆಳೆದಿರುವ ಬೆಳೆ ವಿವರವನ್ನು ಹಾಕಿ ಬೆಳೆಯ 2 ಪೋಟೋ ಕ್ಲಿಕ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬೇಕು.

ಒಂದೊಮ್ಮೆ ನಿಮ್ಮ ಸರ್ವೆ ನಂಬರ್ ಗಳು ಕಾಣಿಸದೇ ಇದ್ದಲ್ಲಿ "ಸರ್ವೆ ನಂಬರ್ ಸೇರಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ ಬಿಟ್ಟು ಹೋದ ಸರ್ವೆ ನಂಬರ್ ಅನ್ನು ಸೇರಿಸಬಹುದು.

ನಿಮ್ಮ ಜಮೀನಿನ ಬೆಳೆ ವಿವರ ದಾಖಲಿಸಿದ ಬಳಿಕ ಕೊನೆಯಲ್ಲಿ "ಅಪ್ಲೋಡ್ ಮಾಡಿ" ಬಟನ್ ಮೇಲೆ ಕ್ಲಿಕ್ ಮಾಡಿ ತಪ್ಪದೇ ನೀವು ಮಾಡಿರುವ ಬೆಳೆ ಸಮೀಕ್ಷೆ ವರದಿಯನ್ನು ಅಪ್ಲೋಡ್ ಮಾಡಬೇಕು ಇಲ್ಲವಾದಲ್ಲಿ ಈ ವಿವರವು ನಿಮ್ಮ ಮೊಬೈಲ್ ನಲ್ಲೇ ಉಳಿದು ಬಿಡುತ್ತದೆ.

ಸದರಿ ಮಾಹಿತಿಯನ್ನು ಬೆಳೆ ವಿಮೆ(crop insurance), ಬೆಳೆ ನಷ್ಟ ಪರಿಹಾರ(crop loss), ಬೆಂಬಲ ಬೆಲೆ(MSP) ಮತ್ತು ಸರ್ಕಾರದ ವಿವಿಧ ಯೋಜನೆ ಅಡಿ ಸವಲತ್ತುಗಳನ್ನು ಒದಗಿಸಲು ಆರ್ ಟಿ ಸಿ ಯಲ್ಲಿ ಅಳವಡಿಸಲು ಬಳಸಲಾಗುತ್ತದೆ. ರೈತರು ಹೆಚ್ಚಿನ ಆಸಕ್ತಿಯೊಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರು ತಾವೇ ಖುದ್ದಾಗಿ ದಾಖಲಿಸಬೇಕು.

ಬೆಳೆ ಸಮೀಕ್ಷೆಯ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಲ್ಲಿ, ಬೆಳೆ ವಿಮಾ ಯೋಜನೆ ಅಡಿ ಸರ್ವೆ ನಂಬರ್‌ ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಳನ್ನು ಕೈಗೊಳ್ಳಲು ಸರ್ವೆ ನಂಬರ್‌ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಸಾದ್ಯವಾಗುತ್ತದೆ.

ಅಲ್ಲದೇ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆ ಅನುಷ್ಠಾನಕ್ಕಾಗಿ, ಆರ್‌.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಬಳಸಬಹುದಾಗಿದೆ. ಜಿಲ್ಲೆಯ ರೈತ ಬಾಂಧವರು ತಪ್ಪದೇ ತಮ್ಮ ಜಮೀನಲ್ಲಿರುವ ಬೆಳೆಗಳ ವಿವರವನ್ನು ತಪ್ಪದೇ ದಾಖಲಿಸಬೇಕು. ಗ್ರಾಮಗಳಲ್ಲಿರುವ ವಿದ್ಯಾವಂತ ಯುವಕರು ರೈತರ ಬೆಳೆ ಸಮೀಕ್ಷೆ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ತಮ್ಮ ಹಳ್ಳಿಯ ರೈತ ಸಮುದಾಯದ ಬೆಳೆ ಮಾಹಿತಿ ದಾಖಲಿಸಬಹುದು. ಬೆಳೆ ವಿವರ ದಾಖಲಾಗದಿದ್ದಲ್ಲಿ ಸರ್ಕಾರದ ಯೋಜನೆಗಳಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಗ್ರಾಮದ ಖಾಸಗಿ ನಿವಾಸಿ (ಪಿ.ಆರ್‌), ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾ ಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಇಲಾಖೆಯ ಅಧಿಕಾರಿಗಳನ್ನು ಮತ್ತು ಟೋಲ್‌ ಫ್ರೀ ಸಂಖ್ಯೆ 8448447715ಗೆ ಸಂಪರ್ಕಿಸಬಹುದಾಗಿದೆ

]]>
Sat, 28 Jun 2025 18:59:21 +0530 shivuagrico
ಬೆಳೆವಿಮೆ ಕಟ್ಟಲು ಕೊನೆಯ 2 ದಿನ ಬಾಕಿ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ&crop insurance last date https://krushirushi.in/Crop-insurance-last-date-2190 https://krushirushi.in/Crop-insurance-last-date-2190 ಜಿಲ್ಲಾವಾರು,ಬೆಳೆವಾರು ಬೆಳೆವಿಮೆ ದಿನಾಂಕ ಬಿಡುಗಡೆ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ-crop insurance last date  

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2025-26" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ

ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ

]]>
Sat, 28 Jun 2025 07:40:12 +0530 shivuagrico
ಪಿಎಂ ಕಿಸಾನ್ 20ನೇ ಕಂತಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್,ಈ ಪಟ್ಟಿಯಲ್ಲಿರುವ 7 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ&pmkisan 20th instalment ineligible list https://krushirushi.in/Pmkisan-20th-instalment-ineligible-list-2189 https://krushirushi.in/Pmkisan-20th-instalment-ineligible-list-2189 ಪಿಎಂ ಕಿಸಾನ್ 20ನೇ ಕಂತಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್,ಈ ಪಟ್ಟಿಯಲ್ಲಿರುವ 7 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ-pmkisan 20th instalment ineligible list

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ನೋಂದಾಯಿಸಿದ್ಧ ರಾಜ್ಯದ 7 ಲಕ್ಷಕ್ಕೂ ಅಧಿಕ ರೈತರನ್ನು ಅನರ್ಹಗೊಳಿಸಲಾಗಿದೆ.


ರಾಜ್ಯದಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಆರಂಭವಾದ ಒಂದು ವರ್ಷದಲ್ಲಿ 53.81 ಲಕ್ಷಕ್ಕೂ ಅಧಿಕ ರೈತರು ನೋಂದಣಿ ಮಾಡಿಸಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದರು.

ಇವರ ಪೈಕಿ 7 ಲಕ್ಷಕ್ಕೂ ಅಧಿಕ ರೈತರನ್ನು ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಅನರ್ಹಗೊಳಿಸಲಾಗಿದೆ.

ಭೂ ದಾಖಲೆಗಳ ಕೊರತೆ, ಇ-ಕೆವೈಸಿ ಸಮಸ್ಯೆ, ತೆರಿಗೆ ಪಾವತಿದಾರರು, ಸರ್ಕಾರಿ ನೌಕರಿ ಹೊಂದಿರುವುದು, ಸಾಂವಿಧಾನಿಕ ಹುದ್ದೆಗಳಲ್ಲಿ ಕಾರ್ಯನಿರ್ವಹಣೆ ಸೇರಿದಂತೆ ಅನೇಕ ಕಾರಣಗಳಿಂದ ಹಂತ ಹಂತವಾಗಿ ಪರಿಶೀಲನೆ ನಡೆಸಿ ಸುಮಾರು 7 ಲಕ್ಷ ರೈತರನ್ನು ಅನರ್ಹಗೊಳಿಸಲಾಗಿದೆ.

2018ರಲ್ಲಿ ಯೋಜನೆ ಆರಂಭವಾದ ಸಂದರ್ಭದಲ್ಲಿ 19,819 ರೈತರು ನೋಂದಾಯಿಸಿದ್ದು, 2019-20 ರಲ್ಲಿ 53,81,184 ರೈತರು ನೋಂದಾಯಿಸಿದ್ದರು. ಅರ್ಹರಲ್ಲದವರು ಕೂಡ ಹೆಸರು ನೋಂದಾಯಿಸಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದರಿಂದ ಪರಿಶೀಲನೆ ಕಾರ್ಯ ಆರಂಭಿಸಲಾಗಿದ್ದು, ಈಗ 47.50 ಲಕ್ಷ ರೈತರು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ.

ರೈತರ ನೋಂದಣಿ ಕಾರ್ಯ ನಿರಂತರವಾಗಿ ನಡೆಯುವುದರಿಂದ ಪ್ರತಿ ಕಂತು ವಿತರಣೆಯ ಸಂದರ್ಭದಲ್ಲಿ ರೈತರ ಸಂಖ್ಯೆ ಹೆಚ್ಚು ಕಡಿಮೆಯಾಗುತ್ತದೆ. ಅರ್ಹರನ್ನು ಸೇರಿಸುವುದು, ಅನರ್ಹರನ್ನು ಕೈಬಿಡುವ ಪ್ರಕ್ರಿಯೆ ನಿರಂತರವಾಗಿರುತ್ತದೆ.

ಆಧಾರ್ ಮತ್ತು ಪಹಣಿಯೊಂದಿಗೆ ಫ್ರೂಟ್ಸ್ ಐಡಿ ತಂತ್ರಾಂಶದಲ್ಲಿ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿ ಇ-ಕೆವೈಸಿಯೊಂದಿಗೆ ಕಿಸಾನ್ ಸಮ್ಮಾಣ್ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಜಮೀನಿನ ಮಾಲೀಕರು ನಿಧನರಾಗಿದ್ದಲ್ಲಿ ಇತರೆ ವಾರಸುದಾರರು ಪೌತಿ ಖಾತೆ ಮಾಡಿಸಿದರೆ ಯೋಜನೆಗೆ ಅರ್ಹರಾಗುತ್ತಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2019 ರ ನಂತರ ಜಮೀನು ಖರೀದಿಸಿದವರು ಮತ್ತು ತಂದೆಯ ಜಮೀನನ್ನು ಭಾಗ ಮಾಡಿಕೊಂಡಿದ್ದರೆ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಲಾಗಿದೆ. ಒಂದು ವೇಳೆ ತಾಂತ್ರಿಕ ದೋಷ, ಇ-ಕೆವೈಸಿ ಸಮಸ್ಯೆಯಿಂದ ಯಾವುದೇ ರೈತರ ಹೆಸರು ಪಟ್ಟಿಯಿಂದ ಹೊರಗುಳಿದಿದ್ದರೆ ಮತ್ತೊಮ್ಮೆ ಪರಿಶೀಲನೆಗೆ ಒಳಪಡಿಸಲು ಅವಕಾಶವಿದೆ. ಈ ಯೋಜನೆಯಡಿ ವಾರ್ಷಿಕ 6,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. 3 ಕಂತುಗಳಲ್ಲಿ 4 ತಿಂಗಳಿಗೊಮ್ಮೆ ನೇರವಾಗಿ ರೈತರ ಖಾತೆಗೆ 2 ಸಾವಿರ ರೂ. ವರ್ಗಾಯಿಸಲಾಗುವುದು.

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 20th instalment ineligible list


ವರ್ಷದಲ್ಲಿ ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯ (ಪಿಎಂ-ಕಿಸಾನ್) ಫಲಾನುಭವಿಗಳ ಸಂಖ್ಯೆ(pmkisan 20th instalment ineligible list) ಐದು ಲಕ್ಷದಿಂದ ಆರು ಲಕ್ಷದಷ್ಟು ಕುಸಿತವಾಗಿದೆ.


ಲೋಕಸಭೆಯಲ್ಲಿ ಮೈಸೂರು ಸಂಸದ ಯದುವೀ‌ರ್ ಒಡೆಯ‌ರ್ ಮಂಗಳವಾರ ಕೇಳಿದ ಪ್ರಶ್ನೆಗೆ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್ ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ.


13ನೇ ಕಂತಿನವರೆಗೆ (2023ರ ಮಾರ್ಚ್) ರಾಜ್ಯದ ಫಲಾನುಭವಿಗಳ ಸಂಖ್ಯೆ 49 ಲಕ್ಷದಷ್ಟು ಇತ್ತು. 14ನೇ ಕಂತಿನಲ್ಲೂ ಫಲಾನುಭವಿಗಳ ಸಂಖ್ಯೆ 49.34 ಲಕ್ಷ ಆಗಿತ್ತು. 15ನೇ ಕಂತಿನಲ್ಲಿ ಈ ಸಂಖ್ಯೆ 43.78 ಲಕ್ಷಕ್ಕೆ ಕುಸಿಯಿತು. ಆ ಬಳಿಕ ಸಂಖ್ಯೆಯಲ್ಲಿ ಗಣನೀಯ ಏರಿಕೆ ಆಗಿಲ್ಲ.


ಪಿಎಂ- ಕಿಸಾನ್ ಯೋಜನೆಯಡಿ ಕೃಷಿಕರಿಗೆ ವಾರ್ಷಿಕ ₹6 ಸಾವಿರ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಈ ಮೊತ್ತವನ್ನು ₹8 ಸಾವಿರ ಅಥವಾ ₹12 ಸಾವಿರಕ್ಕೆ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Pmkisan 19th instalment ineligible list-ಪಿಎಂ ಕಿಸಾನ್ 19ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Fri, 27 Jun 2025 12:20:53 +0530 shivuagrico
Bele vime&ವಾರದೊಳಗೆ ಬೆಳೆ ವಿಮೆ ಪರಿಹಾರ&ಕೃಷಿ ಸಚಿವ ಚೆಲುವರಾಯಸ್ವಾಮಿ https://krushirushi.in/Bele-vime-2188 https://krushirushi.in/Bele-vime-2188 Bele vime-ವಾರದೊಳಗೆ ಬೆಳೆ ವಿಮೆ ಪರಿಹಾರ-ಕೃಷಿ ಸಚಿವ ಚೆಲುವರಾಯಸ್ವಾಮಿ

ವಾರದಲ್ಲಿ ವಿಮೆ ಹಣ ಜಮಾ: 'ಬೆಳೆ ವಿಮೆ' 
ಪರಿಹಾರ ಮೊತ್ತ ವಿಳಂಬವಾಗುತ್ತಿರುವುದಕ್ಕೆ ಹೆಚ್ಚಿನ ಕರೆಗಳ ಬಂದವು. ರಾಣೆಬೆನ್ನೂರು ತಾಲೂಕಿನ ಜೋಯಿಸರ ಹಳ್ಳಿಯ ಶಂಕರಪ್ಪ ರಾಮಪ್ಪ, ಕಲಬುರಗಿಯ ಬಾಬು ಸಾಬ್ ಪಾಟೀಲ್, ಶಿರಾ ತಾಲೂಕಿನ ತಿಮ್ಮರಾಜು, ವಿಜಯಪುರದ ಹನುಮಂತ, ರಾಯಚೂರು ಮಾನ್ವಿ ತಾಲೂಕಿನ ಮಿರಾಜುದ್ದೀನ್, ಗೌರಿಬಿದನೂರು ತಾಲೂಕಿನ ಸತೀಶ್ ಸೇರಿದಂತೆ ಇನ್ನೂ ಕೆಲವರು ಪ್ರಸ್ತಾಪಿಸಿದ ಬೆಳೆ ವಿಮೆ ಸೂಕ್ತ ಸಮಯಕ್ಕೆ ಬಾರದಿರುವ ವಿಚಾರಕ್ಕೆ ಸಚಿವರು ಸ್ಪಂದಿಸಿದರು. 



"ಸಮೀಕ್ಷೆ ನಡೆಸಿ ಬೆಳೆ ಹಾನಿಯಾಗಿರುವುದು ಖಾತರಿಯಾಗಷ್ಟೇ ಬೆಳೆ ವಿಮೆ ಪರಿಹಾರ ನೀಡಲಾಗುತ್ತದೆ. ಈಗಾಗಲೇ ಬೆಳೆ ವಿಮೆ ಹಣ ರೈತರ ಖಾತೆಗೆ ಜಮೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕಳೆದ ವರ್ಷದ ಬೆಳೆ ವಿಮೆ ಪರಿಹಾರ ವಾರರೊಳಗೆ ರೈತರ ಖಾತೆಗೆ ಜಮೆಯಾಗಲಿದೆ. ಕಲಬುರಗಿಯಲ್ಲಿ ಕಳೆದ ಅಕ್ಟೋಬ‌ರ್-ನವೆಂಬರ್ ನಲ್ಲಿ ಆದ ಬೆಳೆಹಾನಿಗೆ 600 ಕೋಟಿ ಪರಿಹಾರ ನೀಡಲಾಗಿದೆ ಎಂದು ಹೇಳಿದರು.

 ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Fri, 27 Jun 2025 08:13:48 +0530 shivuagrico
ಕೊನೆಗೂ ಜಮಾ ಆಯ್ತು 3 ತಿಂಗಳ ಪೇಂಡಿಗ್ 6000 ರೂಪಾಯಿ ಗೃಹಲಕ್ಷ್ಮಿ ಹಣ&Gruhalakshmi list https://krushirushi.in/Gruhalakshmi-list-2187 https://krushirushi.in/Gruhalakshmi-list-2187 ಕೊನೆಗೂ ಜಮಾ ಆಯ್ತು 3 ತಿಂಗಳ ಪೇಂಡಿಗ್ 6000 ರೂಪಾಯಿ ಗೃಹಲಕ್ಷ್ಮಿ ಹಣ-Gruhalakshmi list

ಬಾಕಿ ಉಳಿದಿರುವ ಮೂರು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಒಟ್ಟಿಗೆ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನವರಿ, ಫೆಬ್ರವರಿ, ಮಾರ್ಚ್ ಈ ಮೂರು ತಿಂಗಳ ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.

ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್‌ ಖಾತೆಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. 

 

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Thu, 26 Jun 2025 08:44:47 +0530 shivuagrico
Direct benefit transfer&ಆಧಾರ್ ನಂಬರ್ ಹಾಕಿ ಯಾವ ಯೋಜನೆಯಿಂದ ಎಷ್ಟು ಹಣ ಜಮೆ ಆಗಿದೆ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ https://krushirushi.in/Krushirushi-2186 https://krushirushi.in/Krushirushi-2186 Direct benefit transfer-ಆಧಾರ್ ನಂಬರ್ ಹಾಕಿ ಯಾವ ಯೋಜನೆಯಿಂದ ಎಷ್ಟು ಹಣ ಜಮೆ ಆಗಿದೆ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಯೋಜನೆಗಳ ಪಟ್ಟಿ ದೊರೆಯಲಿದೆ, ಅದರಲ್ಲಿ ನಿಮಗೆ ಬೇಕಾದ ಯೋಜನೆಯ ಮೇಲೆ ಕ್ಲಿಕ್ ಮಾಡಿ

ಉದಾಹರಣೆಗೆ ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿ(Gruhalakahmi)

ಈ ಕೆಳಗಿನಂತೆ ಇಲ್ಲಿಯವರೆಗೂ ಹಣ ಜಮಾ ಆಗಿರುವ ಮಾಹಿತಿ ತೋರಿಸುತ್ತದೆ.

]]>
Wed, 25 Jun 2025 10:18:51 +0530 shivuagrico
Crop you can insure&ಮುಂಗಾರಿನ ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಬೇಕು? ಚೆಕ್ ಮಾಡಿಕೊಂಡು ಬೆಳೆವಿಮೆ ಕಟ್ಟಿ https://krushirushi.in/Crop-you-can-insure-2185 https://krushirushi.in/Crop-you-can-insure-2185 Crop you can insure-ಮುಂಗಾರಿನ ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಬೇಕು? ಚೆಕ್ ಮಾಡಿಕೊಂಡು ಬೆಳೆವಿಮೆ ಕಟ್ಟಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ


Farmer ಕಾಲಂನಲ್ಲಿ "
Crop you can insure" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ selet ಮಾಡಿ Display ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಯಾವ ಬೆಳೆಗೆ ಎಷ್ಟು ಬೆಳೆವಿಮೆ(crop insurance) ಸಿಗಲಿದೆ ಎಂಬ ಮಾಹಿತಿ ದೊರೆಯಲಿದೆ.

ವಿಡಿಯೊ ನೋಡಿ

https://youtu.be/KIjiKXTDp2E?si=gfKzJeykEkROrM_m 

40° ಟೆಂಪರೇಚರ್ ನಲ್ಲಿ ಪೈನಾಪಲ್/ಅನಾನಸ್ ಬೆಳೆದು ಎಕರೆಗೆ 6 ಲಕ್ಷ ಆದಾಯ ಗಳಿಸಿದ ರೈತ



Belevime last date 2024-ಮುಂಗಾರು ಬೆಳೆವಿಮೆ ನೊಂದಣೆ ಪ್ರಾರಂಭ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ

ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ

]]>
Tue, 24 Jun 2025 19:44:58 +0530 shivuagrico
Aridra male&ಇಂದಿನಿಂದ ಆರಿದ್ರ ಮಳೆ,ಇಲ್ಲದಿದ್ದರೆ ದರಿದ್ರ https://krushirushi.in/Aridra-male-2183 https://krushirushi.in/Aridra-male-2183 Aridra male-ಇಂದಿನಿಂದ ಆರಿದ್ರ ಮಳೆ,ಇಲ್ಲದಿದ್ದರೆ ದರಿದ್ರ

 

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು ಜಿಲ್ಲೆಯಲ್ಲಿ ಮತ್ತು ದಕ್ಷಿಣ ಕನ್ನಡದ ಸುಳ್ಯ ತಾಲ್ಲೂಕು ಸ್ವಲ್ಪ ಕಡಿಮೆ ಇದ್ದರೂ, ಮಧ್ಯಾಹ್ನ ನಂತರ ಹೆಚ್ಚಾಗುವ ಸಾಧ್ಯತೆ ಇದೆ.


ಈಗಿನಂತೆ ಜೂನ್ 23ರಿಂದ ಸ್ವಲ್ಪ ಕಡಿಮೆ ಇದ್ದರೂ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗುವ ಸಾಧ್ಯತೆ ಕಡಿಮೆ ಇರಬಹುದು. ಜೂನ್ 29ರಿಂದ ಅವಕಾಶ ಸಿಗಬಹುದು. 

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ಜೂನ್ 28ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಜೂನ್ 26ರಿಂದ 28ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ರಾಜ್ಯದ ಹಲವೆಡೆ ಕ್ಷೀಣವಾಗಿದ್ದ ಮಳೆ, ಕರಾವಳಿ ವ್ಯಾಪ್ತಿಯ ಪ್ರದೇಶಗಳಲ್ಲಿ ಜೂ.23ರಿಂದ ಹಾಗೂ ಮಲೆನಾಡು,ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಜೂ.26ರಿಂದ ಬಿರುಸುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.


ಉಡುಪಿಯ ಕಾರ್ಕಳ, ಸಿದ್ದಾಪುರ, ಉತ್ತರ ಕನ್ನಡದ ಕದ್ರಾ, ಕ್ಯಾಸಲ್ ರಾಕ್,ಯಲ್ಲಾಪುರ, ಗೇರುಸೊಪ್ಪ, ದಕ್ಷಿಣ ಕನ್ನಡದ ಮೂಡುಬಿದರೆ, ಮಾಣಿ, ಉಪ್ಪಿನಂಗಡಿ, ಕೊಡಗಿನ ಭಾಗಮಂಡಲ, ಚಿಕ್ಕಮಗಳೂರಿನ ಕೊಟ್ಟಿಗೆಹಾರ ಮತ್ತು ಶೃಂಗೇರಿಯಲ್ಲಿ ಭಾನುವಾರ ಭರ್ಜರಿ ಮಳೆ ಸುರಿದಿತ್ತು.


ಕರಾವಳಿ ಭಾಗದ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾದರೆ, ದಕ್ಷಿಣ ಕರ್ನಾಟಕ ವ್ಯಾಪ್ತಿಯ ಒಂದೆರಡು ಸ್ಥಳಗಳಲ್ಲಿ ಸಾಧಾರಣವಾಗಿತ್ತು.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜೂ.23ರಿಂದ ಜೂ.29ರವರೆಗೆ ಬಿರುಸಾಗಿ ವರ್ಷಧಾರೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಗದಗದಲ್ಲಿ ಜೂ.26ರಿಂದ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಇರಲಿದೆ. ಈ ಸಂದರ್ಭದಲ್ಲಿ ಕೆಲವು ಪ್ರದೇಶಗಳಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ,ಯಾದಗಿರಿಯಲ್ಲಿ ಮುಂದಿನ 4 ದಿನ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ

]]>
Mon, 23 Jun 2025 12:33:36 +0530 shivuagrico
Sala manna&ರೈತರ ಬಾಕಿ 300 ಕೋಟಿ ಬೆಳೆಸಾಲಮನ್ನಾ&ಸಿಎಂ ಸಿದ್ದರಾಮಯ್ಯ,ಹಾಗಾದರೆ ಯಾವ ಬಾಕಿ ರೈತರ ಸಾಲಮನ್ನಾ ಆಗಲಿದೆ,ಸಾಲಮನ್ನಾ ಆಗಲು ಬೇಕಾದ ದಾಖಲೆ ಹಾಗೂ ಅರ್ಹತೆಗಳೇನು? https://krushirushi.in/Sala-manna-2184 https://krushirushi.in/Sala-manna-2184 Sala manna-ರೈತರ ಸಾಲಮನ್ನಾದ 300 ಕೋಟಿ ಬಾಕಿ ತಿರಿಸುತ್ತೇವೆ-ಸಿಎಂ ಸಿದ್ದರಾಮಯ್ಯ

ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ರೈತರ ಸಾಲ ಮನ್ನಾ (Loan Waiver) ಮಾಡಿ ಬಾಕಿ ಉಳಿಸಿದ್ದ 300 ಕೋಟಿ ಹಣವನ್ನು ಕಾಂಗ್ರೆಸ್ ಸರ್ಕಾರ ಮುಂದಿನ ದಿನದಲ್ಲಿ ತೀರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಹಕಾರ ಸಚಿವ ಕೆಎನ್ ರಾಜಣ್ಣ ಅವರ 75ನೇ ವರ್ಷದ ‘ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಹೆಸರು ಪಡೆದುಕೊಂಡರು. ಆದರೆ ಬಾಕಿಯನ್ನು ನಮ್ಮ ಸರ್ಕಾರ ತೀರಿಸಬೇಕಾಗಿದೆ. ಹೆಸರು ಅವರಿಗೆ, ಹೊರೆ ಹೊತ್ತುಕೊಂಡಿದ್ದು ನಮ್ಮ ಸರ್ಕಾರ ಎಂದರು.

2018 ರಿಂದ ಇಲ್ಲಿಯವರೆಗೂ ಕರ್ನಾಟಕದಲ್ಲಿ ಯಾರಿಗೆಲ್ಲಾ ಎಷ್ಟು ಸಾಲ ಮನ್ನಾ ಆಗಿದೆ? ಹಾಗಾದರೆ ಯಾವ ಬಾಕಿ ರೈತರ ಸಾಲಮನ್ನಾ ಆಗಲಿದೆ,ಸಾಲಮನ್ನಾ ಆಗಲು ಬೇಕಾದ ದಾಖಲೆ ಹಾಗೂ ಅರ್ಹತೆಗಳೇನು? ಹೀಗೆ ಚೆಕ್ ಮಾಡಿ-Bele sala manna status 

2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಇದ್ದಾಗ ರಾಜ್ಯದ ರೈತರ ಸಾಲಮನ್ನಾ(Bele sala manna) ಮಾಡಿದ್ದರು.ಆದರೆ ಅದರಲ್ಲಿ ಕೇಲವು ರೈತರ ದಾಖಲೆಗಳ ಕೊರತೆಯಿಂದಾಗಿ ಬಾಕಿ ಉಳಿದ ಪ್ರಕರಣಗಳಲ್ಲಿ ದಾಖಲಾತಿಗಳನ್ನು ಸಲ್ಲಿಸಿದ ನಂತರ ಸಾಲಮನ್ನಾ ಆಗುತ್ತಿದೆ.ಹಾಗಾದರೆ ಈ ಲೇಖನದಲ್ಲಿ ಯಾವೆಲ್ಲಾ ದಾಖಲಾತಿಗಳು ಬೇಕಾಗಬಹುದು ಎಂದು ಚೆಕ್ ಮಾಡಬಹುದು.

ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

ನಂತರ "Revenue department/ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು"(Revenue department services)ಮೇಲೆ ಕ್ಲಿಕ್ ಮಾಡಿ

ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ"(farmer) ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು"(Submit)ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ(Crop loan wavier) ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ(Bele sala manna list) ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ

ನಂತರ "CLWS ರೈತನ ಅರ್ಹತೆ" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್(bank) select ಮಾಡಿ,ಸಲ್ಲಿಸು/Submit ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ(crop loan wavier) ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ

]]>
Mon, 23 Jun 2025 06:12:11 +0530 shivuagrico
ಸ್ವಾವಲಂಭಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ 3 ಲಕ್ಷ ರೂಪಾಯಿ ಸಬ್ಸಿಡಿ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ&Vehicle subsidy scheme  https://krushirushi.in/Vehicle-subsidy-scheme-2182 https://krushirushi.in/Vehicle-subsidy-scheme-2182 ಸ್ವಾವಲಂಭಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ 3 ಲಕ್ಷ ರೂಪಾಯಿ ಸಬ್ಸಿಡಿ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Vehicle subsidy scheme 

ಸ್ವಾವಲಂಬಿ ಸಾರಥಿ ಯೋಜನೆ

ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.

ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು

ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.

ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.

ಡ್ರೈವಿಂಗ್ ಲೈಸೆನ್ಸ್

ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.

ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಹಿಂದುಳಿದ ವರ್ಗದವರಾಗಿರಬೇಕು.


ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಬ್ಯಾಂಕ್ ಪಾಸ್ ಬುಕ್

ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ

(DL) ಡ್ರೈವಿಂಗ್ ಲೈಸೆನ್ಸ್

ಫೋಟೋ

ಮೊಬೈಲ್ ನಂಬರ್

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in  ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಿ ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್, 31 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು.

]]>
Sun, 22 Jun 2025 17:21:11 +0530 shivuagrico
Crop survey 2025&26:ಬೆಳೆ ಸಮೀಕ್ಷೆ ಮಾಡದಿದ್ದರೆ ಬೆಳೆವಿಮೆ,ಬೆಳೆಹಾನಿ ಪರಿಹಾರ ಸಿಗಲ್ಲ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಮಾಡಿ ಬೆಳೆ ಸಮೀಕ್ಷೆ https://krushirushi.in/Crop-survey-2025-26 https://krushirushi.in/Crop-survey-2025-26 Crop survey 2025-26:ಬೆಳೆ ಸಮೀಕ್ಷೆ ಮಾಡದಿದ್ದರೆ ಬೆಳೆವಿಮೆ,ಬೆಳೆಹಾನಿ ಪರಿಹಾರ ಸಿಗಲ್ಲ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಮಾಡಿ ಬೆಳೆ ಸಮೀಕ್ಷೆ

ಕರ್ನಾಟಕ ಸರ್ಕಾರ ಈ ಆಡಳಿತ ಮತ್ತು ಕೃಷಿ ಇಲಾಖೆ ಇವರ ಸಹಯೋಗದೊಂದಿಗೆ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ(crop survey) ರೈತರ ಆಪ್ ಬಿಡುಗಡೆ ಮಾಡಿದ್ದು, ರೈತರು ಗೂಗಲ್ ಪ್ಲೇ ಸ್ಟೋರ್ ನಿಂದ ಮುಂಗಾರು ರೈತರ ಬೆಳೆ ಸಮೀಕ್ಷೆ 2025-26 ಆಪ್ ಡೌನ್ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಅಪ್ಲೋಡ್ ಮಾಡಬಹುದು.

ರೈತ ಬಾಂಧವರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ಮುಂಗಾರು ರೈತರ ಬೆಳೆ ಸಮೀಕ್ಷೆ 2025-26 ಎಂಬ ಮೊಬೈಲ್‌ ಆ್ಯಪ್‌ ಗೂಗಲ್‌ ಪ್ಲೇಸ್ಟೋರ್‌ ನಿಂದ ಡೌನ್‌ಲೋಡ್‌ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.csk.farmer23_24.cropsurvey&pcampaignid=web_share

ಮೊದಲು Ekyc ಮೂಲಕ ಆಧಾರ್ ದೃಡಿಕರಿಸಿ ಮೇಲೆ ಕ್ಲಿಕ್ ಮಾಡಿ

ರೈತರ ಅಧಾರ್ ಕಾರ್ಡ ನಂಬರ್ ಅನ್ನು ಹಾಕಿ ಸಹಮತಿ ಇದೆ ಎಂದು ಟಿಕ್ ಮಾಡಿಕೊಂಡು ಕೆಳಗಡೆ ದೃಡೀಕರಣ ವಿಧಾನವನ್ನು ಆಯ್ಕೆ ಮಾಡಿ ಅಲ್ಲಿ OTP ಮೇಲೆ ಕ್ಲಿಕ್ ಮಾಡಿ "ಓಟಿಪಿ ಪಡೆಯಿರಿ" ಬಟನ್ ಮೇಲೆ ಕ್ಲಿಕ್ ಮಾಡಬೇಕು.

ತದನಂತರ ನಿಮ್ಮ ಮೊಬೈಲ್ ಗೆ ಬರುವ 6 ಅಂಕಿಯ OTP ಅನ್ನು ಹಾಕಿ ಸಲ್ಲಿಸಿ ಬಟನ್ ಮೇಲೆ ಕ್ಲಿಕ್ ಮಾಡಿದರೆ  ನಿಮ್ಮ ಎಲ್ಲಾ ವಿವರ ಇಲ್ಲಿ ತೋರಿಸುತ್ತದೆ. ಇಲ್ಲಿ ಮೊಬೈಲ್ ನಂಬರ್ ಹಾಕಿ "ಸಕ್ರಿಯಗೊಳಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ OTP ಅನ್ನು ನಮೂದಿಸಿ "ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ ಸಕ್ರಿಯಗೊಳಿಸಿಕೊಳ್ಳಬೇಕು.

ಇದಾದ ಬಳಿಕ ನಿಮ್ಮ ಸರ್ವೆ ನಂಬರ್ ಗಳು ಇಲ್ಲಿ ತೋರಿಸುತ್ತವೆ ನಂತರ ನಿಮ್ಮ ಜಮೀನಿನ್ನು ಭೇಟಿ ಮಾಡಿ ಒಂದು ಒಂದು ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ "ಬೆಳೆ ವಿವರ ದಾಖಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಪ್ರಸ್ತುತ ಬೆಳೆದಿರುವ ಬೆಳೆ ವಿವರವನ್ನು ಹಾಕಿ ಬೆಳೆಯ 2 ಪೋಟೋ ಕ್ಲಿಕ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬೇಕು.

ಒಂದೊಮ್ಮೆ ನಿಮ್ಮ ಸರ್ವೆ ನಂಬರ್ ಗಳು ಕಾಣಿಸದೇ ಇದ್ದಲ್ಲಿ "ಸರ್ವೆ ನಂಬರ್ ಸೇರಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ ಬಿಟ್ಟು ಹೋದ ಸರ್ವೆ ನಂಬರ್ ಅನ್ನು ಸೇರಿಸಬಹುದು.

ನಿಮ್ಮ ಜಮೀನಿನ ಬೆಳೆ ವಿವರ ದಾಖಲಿಸಿದ ಬಳಿಕ ಕೊನೆಯಲ್ಲಿ "ಅಪ್ಲೋಡ್ ಮಾಡಿ" ಬಟನ್ ಮೇಲೆ ಕ್ಲಿಕ್ ಮಾಡಿ ತಪ್ಪದೇ ನೀವು ಮಾಡಿರುವ ಬೆಳೆ ಸಮೀಕ್ಷೆ ವರದಿಯನ್ನು ಅಪ್ಲೋಡ್ ಮಾಡಬೇಕು ಇಲ್ಲವಾದಲ್ಲಿ ಈ ವಿವರವು ನಿಮ್ಮ ಮೊಬೈಲ್ ನಲ್ಲೇ ಉಳಿದು ಬಿಡುತ್ತದೆ.

ಸದರಿ ಮಾಹಿತಿಯನ್ನು ಬೆಳೆ ವಿಮೆ(crop insurance), ಬೆಳೆ ನಷ್ಟ ಪರಿಹಾರ(crop loss), ಬೆಂಬಲ ಬೆಲೆ(MSP) ಮತ್ತು ಸರ್ಕಾರದ ವಿವಿಧ ಯೋಜನೆ ಅಡಿ ಸವಲತ್ತುಗಳನ್ನು ಒದಗಿಸಲು ಆರ್ ಟಿ ಸಿ ಯಲ್ಲಿ ಅಳವಡಿಸಲು ಬಳಸಲಾಗುತ್ತದೆ. ರೈತರು ಹೆಚ್ಚಿನ ಆಸಕ್ತಿಯೊಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರು ತಾವೇ ಖುದ್ದಾಗಿ ದಾಖಲಿಸಬೇಕು.

ಬೆಳೆ ಸಮೀಕ್ಷೆಯ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಲ್ಲಿ, ಬೆಳೆ ವಿಮಾ ಯೋಜನೆ ಅಡಿ ಸರ್ವೆ ನಂಬರ್‌ ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಳನ್ನು ಕೈಗೊಳ್ಳಲು ಸರ್ವೆ ನಂಬರ್‌ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಸಾದ್ಯವಾಗುತ್ತದೆ.

ಅಲ್ಲದೇ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆ ಅನುಷ್ಠಾನಕ್ಕಾಗಿ, ಆರ್‌.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಬಳಸಬಹುದಾಗಿದೆ. ಜಿಲ್ಲೆಯ ರೈತ ಬಾಂಧವರು ತಪ್ಪದೇ ತಮ್ಮ ಜಮೀನಲ್ಲಿರುವ ಬೆಳೆಗಳ ವಿವರವನ್ನು ತಪ್ಪದೇ ದಾಖಲಿಸಬೇಕು. ಗ್ರಾಮಗಳಲ್ಲಿರುವ ವಿದ್ಯಾವಂತ ಯುವಕರು ರೈತರ ಬೆಳೆ ಸಮೀಕ್ಷೆ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ತಮ್ಮ ಹಳ್ಳಿಯ ರೈತ ಸಮುದಾಯದ ಬೆಳೆ ಮಾಹಿತಿ ದಾಖಲಿಸಬಹುದು. ಬೆಳೆ ವಿವರ ದಾಖಲಾಗದಿದ್ದಲ್ಲಿ ಸರ್ಕಾರದ ಯೋಜನೆಗಳಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಗ್ರಾಮದ ಖಾಸಗಿ ನಿವಾಸಿ (ಪಿ.ಆರ್‌), ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾ ಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಇಲಾಖೆಯ ಅಧಿಕಾರಿಗಳನ್ನು ಮತ್ತು ಟೋಲ್‌ ಫ್ರೀ ಸಂಖ್ಯೆ 8448447715ಗೆ ಸಂಪರ್ಕಿಸಬಹುದಾಗಿದೆ

]]>
Sun, 22 Jun 2025 07:44:43 +0530 shivuagrico
Health insurance&ರಾಜ್ಯದ ಗುತ್ತಿಗೆ,ಹೊರಗುತ್ತಿಗೆ ನೌಕರರಿಗೆ 5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ https://krushirushi.in/Health-insurance-2180 https://krushirushi.in/Health-insurance-2180 Health insurance-ರಾಜ್ಯದ ಗುತ್ತಿಗೆ,ಹೊರಗುತ್ತಿಗೆ ನೌಕರರಿಗೆ 5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ


ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವ ಧನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವವರಿಗೆ ನಗದುರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.


ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರು, ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಮೂರು ಲಕ್ಷ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5 ಲಕ್ಷ ರೂ.ವರೆಗೆ ನಗದುರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.

]]>
Sat, 21 Jun 2025 16:36:33 +0530 shivuagrico
Tur dal rate&ತೊಗರಿ ಬೆಳೆ ಬೆಲೆಯಲ್ಲಿ ಬಾರಿ ಇಳಿಕೆ,ಗ್ರಾಹಕರು ಫುಲ್ ಖುಷ್,ರೈತರಿಗೆ ಕೊಂಚ ನಿರಾಸೆ! https://krushirushi.in/Tur-dal-rate-2179 https://krushirushi.in/Tur-dal-rate-2179 Tur dal rate-ತೊಗರಿ ಬೇಳೆ ಬೆಲೆಯಲ್ಲಿ ಬಾರಿ ಇಳಿಕೆ,ಗ್ರಾಹಕರು ಫುಲ್ ಖುಷ್,ರೈತರಿಗೆ ಕೊಂಚ ನಿರಾಸೆ!

ತೊಗರಿ ಕಣಜ ಕಲಬುರಗಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಹೆಚ್ಚಿನ ಇಳುವರಿ ಬಂದಿರುವುದರ ಜೊತೆಗೆ ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶದಲ್ಲಿಯೂ ಉತ್ಪಾದನೆ ಹೆಚ್ಚಿದ ಪರಿಣಾಮ ತೊಗರಿ ಬೇಳೆಯ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಮೂರ್ನಾಲ್ಕು ತಿಂಗಳ ಹಿಂದೆ ಪ್ರತಿ ಕೆ.ಜಿಗೆ ₹120 ಇದ್ದ ತೊಗರಿ ಬೇಳೆ ದರ ಈಗ ₹95ಕ್ಕೆ ಇಳಿಕೆ ಕಂಡಿದೆ. 

ಇದರಿಂದಾಗಿ ಕೈಗೆಟಕುವ ದರದಲ್ಲಿ ಗ್ರಾಹಕರು ತೊಗರಿ ಬೇಳೆ ಖರೀದಿಸಲು ಸಾಧ್ಯವಾಗುತ್ತಿದೆ. ಆದರೆ, ಕಳೆದ ವರ್ಷ ಕ್ವಿಂಟಲ್‌ಗೆ ₹12 ಸಾವಿರಕ್ಕೆ ಏರಿಕೆ ಕಂಡಿದ್ದ ತೊಗರಿ ದರ ಈ ಬಾರಿ ₹6,500ರಿಂದ ₹7 ಸಾವಿರ ಆಸುಪಾಸಿನಲ್ಲಿರುವುದರಿಂದ ರೈತರಿಗೆ ನಷ್ಟವಾಗುತ್ತಿದೆ.

ಕಳೆದ ವರ್ಷ ನೆಟೆ ರೋಗ ಬಂದಿದ್ದರಿಂದ ತೊಗರಿ ಉತ್ಪಾದನೆ ಕುಸಿದಿತ್ತು. ಈ ಬಾರಿ ಉತ್ತಮ ಇಳುವರಿ ಬಂದಿದ್ದರಿಂದ ದಾಲ್‌ ಮಿಲ್‌ನವರು ಪ್ರತಿ ಕ್ವಿಂಟಲ್‌ಗೆ ₹6,300ರಂತೆ ತೊಗರಿ ಖರೀದಿ ಮಾಡಿದ್ದಾರೆ. ಹೀಗಾಗಿ, ತೊಗರಿ ಬೇಳೆ ದರವೂ ಇಳಿಕೆಯಾಗಿದೆ.

ಕೇಂದ್ರ ಸರ್ಕಾರವು ಬರ್ಮಾ, ಘಾನಾ, ದಕ್ಷಿಣ ಆಫ್ರಿಕಾ ದೇಶಗಳಿಂದ ಈ ಬಾರಿ ತೊಗರಿಯನ್ನು ಆಮದು ಮಾಡಿಕೊಂಡಿದ್ದರಿಂದ ತೊಗರಿ ಸಂಗ್ರಹ ಯಥೇಚ್ಛವಾಗಿದೆ. ದಾಲ್‌ ಮಿಲ್‌ಗಳು ಹೆಚ್ಚಿನ ಪ್ರಮಾಣದಲ್ಲಿ ತೊಗರಿ ಬೇಳೆಯನ್ನು ಉತ್ಪಾದನೆ ಮಾಡಿವೆ ಎನ್ನುತ್ತಾರೆ ವ್ಯಾಪಾರಿಗಳು.

‘ಈ ಬಾರಿ ಕಲಬುರಗಿ, ವಿಜಯಪುರ ಜಿಲ್ಲೆ ಹಾಗೂ ಪಕ್ಕದ ಆಂಧ್ರಪ್ರದೇಶ, ತೆಲಂಗಾಣದಲ್ಲೂ ವ್ಯಾಪಕವಾಗಿ ತೊಗರಿ ಬೆಳೆದಿದ್ದಾರೆ. ಇಳುವರಿ ಉತ್ತಮವಾಗಿ ಬಂದಿದೆಯಾದರೂ ತೊಗರಿ ಗುಣಮಟ್ಟ ಕಡಿಮೆ ಇದೆ. ಹೀಗಾಗಿ, ಕ್ವಿಂಟಲ್‌ಗೆ ಸರಾಸರಿ ₹6,300ರಂತೆ ತೊಗರಿ ಖರೀದಿ ಮಾಡಿದ್ದೇವೆ. ₹9,200ರಿಂದ ₹10 ಸಾವಿರದವರೆಗೆ ಪ್ರತಿ ಕ್ವಿಂಟಲ್ ತೊಗರಿ ಬೇಳೆಯನ್ನು ಮಾರಾಟ ಮಾಡುತ್ತಿದ್ದೇವೆ’ ಎಂದು ಗುಲಬರ್ಗಾ ದಾಲ್‌ ಮಿಲ್‌ ಅಸೋಸಿಯೇಷನ್ ಅಧ್ಯಕ್ಷ ಚಂದ್ರಶೇಖರ ಕೋಬಾಳ ಮಾಹಿತಿ ನೀಡಿದರು. 

‘ಮೂರ್ನಾಲ್ಕು ತಿಂಗಳ ಹಿಂದೆ ಪ್ರತಿ ಕೆ.ಜಿಗೆ ₹120 ಇದ್ದ ತೊಗರಿ ಬೇಳೆ ದರವು ಈಗ ₹95ರಿಂದ ₹100ರಂತೆ ಮಾರಾಟವಾಗುತ್ತಿದೆ. ಒಂದು ತಿಂಗಳ ಬಳಿಕ ಮತ್ತೆ ಕೊಂಚ ದರ ಏರಿಕೆಯಾಗಬಹುದು’ ಎನ್ನುತ್ತಾರೆ ಕಲಬುರಗಿಯ ಗಂಜ್ ಪ್ರದೇಶದ ಕಿರಾಣಿ ವ್ಯಾಪಾರಿ ರವಿಶಂಕರ ಜಮಾದಾರಖಾನಿ.

2024ರ ಜುಲೈನಲ್ಲಿ ಪ್ರತಿ ಕೆ.ಜಿ ತೊಗರಿ ಬೇಳೆ ದರವು ₹180ಕ್ಕೆ ತಲುಪಿತ್ತು.

]]>
Sat, 21 Jun 2025 07:05:19 +0530 shivuagrico
Gram panchayat&ನಿಮ್ಮಗ್ರಾಮ ಪಂಚಾಯತಿಯಲ್ಲಿ ನಿಮ್ಮ ಕೆಲಸ ಆಗದಿದ್ದರೆ ಹೀಗೆ ಮಾಡಿ https://krushirushi.in/Gram-Panchayat-2178 https://krushirushi.in/Gram-Panchayat-2178 Gram panchayat-ನಿಮ್ಮಗ್ರಾಮ ಪಂಚಾಯತಿಯಲ್ಲಿ ಸಿಗುವ ಸೇವೆಗಳು ಹಾಗೂ ನಿಮ್ಮ ಕೆಲಸ ಮಾಡಲು ನಿಗಧಿಪಡಿಸಿದ ಕಾಲಮಿತಿ 


Panchamitra what’s app service-ಇನ್ನು ಮುಂದೆ ನಿಮ್ಮ ವಾಟ್ಸಪ್ ನಲ್ಲೆ ಸಿಗಲಿವೆ ಗ್ರಾಮ ಪಂಚಾಯತಿಯ ಎಲ್ಲಾ ಸೇವೆಗಳು, ವಾಟ್ಸಪ್ ನಲ್ಲಿ ಹೀಗೆ ಮೇಸೆಜ್ ಮಾಡಿ

ಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಅದೇನು ಅಂದ್ರೇ ಜಸ್ಟ್ ಈ ನಂಬರ್ ಗೆ ವಾಟ್ಸಾಪ್ (WhatsApp) ಮಾಡಿ ಸಾಕು.

ಅದು ಹೇಗೆ ಅಂತ ಮುಂದೆ ಓದಿ.

ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಗ್ರಾಮ ಪಂಚಾಯ್ತಿ ಸೇವೆಗಳು ಕುಳಿತಲ್ಲೇ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭಿಸಲಾಗಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಪಡೆಯಬಹುದಾಗಿದೆ.

ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ.

ಕುಂದು-ಕೊರತೆಗಳನ್ನು ಹಾಗೂ ಸಮಸ್ಯೆಗಳನ್ನು ದಾಖಲಿಸಲು ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಪಂಚಮಿತ್ರ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಗ್ರಾಮೀಣ ಜನತೆ ತಮ್ಮೆಲ್ಲಾ ಅಹವಾಲುಗಳನ್ನು ದಾಖಲಿಸಲು ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಬಹುದು. ಅಥವಾ ಅದೇ ಸಂಖ್ಯೆಯಲ್ಲಿ ವಾಟ್ಸಾಪ್ ಚಾಟ್ ಮೂಲಕವೂ ಅಹವಾಲು ಸಲ್ಲಿಸಬಹುದು.

 ಸಾರ್ವಜನಿಕರು ತಮಗೆ ಅವಶ್ಯಕತೆ ಇರುವ ಗ್ರಾ.ಪಂ.ಗಳಲ್ಲಿ ಲಭ್ಯ ಸೇವೆಗಳಿಗೆ ಅರ್ಜಿ ಸಲ್ಲಿಸಲು, ವಿವಿಧ ಮಾಹಿತಿ, ವಿವರಗಳನ್ನು ಪಡೆಯಲು ಹಲವಾರು ವೆಬ್​ಸೈಟ್‌ ಮತ್ತು ಪೋರ್ಟಲ್​ಗಳಿಗೆ ಭೇಟಿ ನೀಡಬೇಕಾಗಿತ್ತು. ಅಲ್ಲದೇ, ಗ್ರಾ.ಪಂ.ಗಳಿಗೆ ಸಂಬಂಧಿಸಿದ ಎಲ್ಲಾ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಲು ಯಾವುದೇ ನಿರ್ದಿಷ್ಟವಾದ ವೆಬ್​ಸೈಟ್‌ ಅಥವಾ ಪೋರ್ಟಲ್​ಗಳು ಇರಲಿಲ್ಲ. ಈ ಹಿನ್ನೆಲೆಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ಪಂಚಮಿತ್ರ ಎಂಬ ವಿನೂನತ ವಾಟ್ಸ್‌ಆ್ಯಪ್‌ ಚಾಟ್‌ ಅನ್ನು ಅನುಷ್ಠಾನಕ್ಕೆ ತರಲಾಗಿದೆ. ಪಂಚಮಿತ್ರದ ವಾಟ್ಸ್‌ಆ್ಯಪ್‌ ನಂ. 8277506000 ಮೂಲಕವೇ ಇನ್ನು ಮುಂದೆ ಸಾರ್ವಜನಿಕರು ಗ್ರಾ.ಪಂ.ಗಳಗಳಲ್ಲಿ ಲಭ್ಯವಿರುವ ಕಟ್ಟಡ ನಿರ್ಮಾಣ ಲೈಸೆನ್ಸ್, ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜಿನ ಸಂಪರ್ಕ ಕಡಿತ, ವ್ಯಾಪಾರ ಪರವಾನಗಿ ಸೇರಿದಂತೆ ಇತರೆ ಎಲ್ಲ ಸೇವೆಗಳಿಗೆ ಅರ್ಜಿ ಸಲ್ಲಿಸಬಹುದು. ಬಳಿಕ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಅದೇ ರೀತಿ ತಮ್ಮ ಗ್ರಾಂ.ಪಂ. ವ್ಯಾಪ್ತಿಯ ಬೀದಿ ದೀಪ ನಿರ್ವಹಣೆ, ಕುಡಿಯುವ ನೀರು, ರಸ್ತೆ-ಸೇತುವೆ ದುರಸ್ತಿ, ತ್ಯಾಜ್ಯ ನಿರ್ವಹಣೆ ಸಮಸ್ಯೆ, ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆಗೆ ಮತ್ತು ಪಂಚಾಯತ್‌ ರಾಜ್‌ ವಿಷಯಗಳಿಗೆ ಸಂಬಂಧಿತ 78 ವ‌ರ್ಗಗಳ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಬಹುದಾಗಿದೆ ಹಾಗೂ ಕುಂದುಕೊರತೆಯ ಸ್ಥಿತಿಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸಬಹುದಾಗಿದೆ.

ಅಲ್ಲದೆ, ಚುನಾಯಿತ ಪ್ರತಿನಿಧಿಗಳ ವಿವರಗಳು, ಅಧಿಕಾರಿ, ಸಿಬ್ಬಂದಿ ವಿವರಗಳು, ಪೂರ್ಣಗೊಂಡ ಗ್ರಾಮ ಪಂಚಾಯಿತಿ ಸಭೆಗಳ ನಡಾವಳಿಗಳು, ಗ್ರಾಮ ಪಂಚಾಯಿತಿಗಳ ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು, ಟೆಂಡರ್‌ಗಳು, ಸೇವೆಗಳ ವಿವರಗಳು, ಸ್ವ-ಸಹಾಯ ಗುಂಪಿನ ವಿವರಗಳು, ಆರ್‌ಟಿಐ ದಾಖಲೆಗಳು ಲಭ್ಯವಾಗಲಿವೆ.

ವಾಟ್ಸಪ್ ಚಾಟ್‌ನಲ್ಲಿ  ಮಾಹಿತಿ ಪಡೆಯೋದು ಹೇಗೆ?

ನಿಮ್ಮ ಮೊಬೈಲ್‌ನಲ್ಲಿ ಇಲಾಖೆಯ ವಾಟ್ಸ್‌ಆ್ಯಪ್‌ ಚಾಟ್‌ ನಂಬರ್‌- 8277506000 ಅನ್ನು ಸೇವ್‌ ಮಾಡಿಕೊಂಡು ಚಾಟ್‌ ಆರಂಭಿಸಿ, Hi ಎಂದು ಮೇಸೆಜ್ ಮಾಡಿ

ನಂತರ ಭಾಷೆಯನ್ನು ಆಯ್ಕೆ ಮಾಡಿ

ನಂತರ ತಾನಾಗಿಯೇ ಕೆಲ ಆಯ್ಕೆಗಳು ಆರಂಭವಾಗುತ್ತಾ ಸಾಗುತ್ತದೆ. ಕ್ರಮ ಸಂಖ್ಯೆಗಳನ್ನು ನಮೂದಿಸುವ ಮೂಲಕ ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮ ಆಯ್ಕೆ ಮಾಡಿಕೊಳ್ಳಿ

 ನೀವು ಬಯಸುವ ಗ್ರಾ.ಪಂಚಾಯಿತಿ ಆಯ್ಕೆ ಮಾಡಿಕೊಂಡು ಅಲ್ಲಿನ ಚುನಾಯಿತಿ ಪ್ರತಿನಿಧಿಗಳು, ಸಿಬ್ಬಂದಿಯ ಮಾಹಿತಿ ಪಡೆಯಬಹುದು.

ಅದೇ ರೀತಿ ಸ್ವಾಧೀನ ಪ್ರಮಾಣಪತ್ರ, ರಸ್ತೆ, ಅಗೆವುದಾಕ್ಕಾಗಿ ಅನುಮತಿ, ಕೈಗಾರಿಕಾ/ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ, ನಿರಾಕ್ಷೇಪಣಾ ಪತ್ರ, ನರೇಗಾ ಅಡಿಯಲ್ಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ, ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು, ಹೊಸ/ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ/ನಿಯಮಿತಗೊಳಿವಿಕರ, ಹೊಸ/ಅಸ್ತಿತ್ವದಲ್ಲಿರುವ ಓವರ್‌ಗೌಂಡ್ ಕೇಬಲ್ ಮೂಲಸೌಕರ್ಯ/ಭೂಗತ ಕೇಬಲ್ ಮೂಲಸೌಕರ್ಯಗಳ ಅನುಮತಿ/ನಿಯಮಿತಗೊಳಿಸುವಿಕೆ, ನಮೂನೆ 9/11ಎ, ನಮೂನೆ 11 ಬಿ ಸೇರಿ ಎಲ್ಲ ಸೇವೆಗಳಿಗೆ ಅರ್ಜಿ ಸಲ್ಲಿಸಬಹುದು. ಕುಂದುಕೊರತೆಗಳನ್ನು ದಾಖಲಿಸಬಹುದು.

ಈ ಮೇಲಿನ ನಾಡಕಛೇರಿ ಸೇವೆಗಳನ್ನು ಪಡೆಯಲು, (https://nadakacheri.karnataka.gov.in/Online_service/loginpage.aspx ) ವೆಬ್‌ ಸೈಟ್‌ ಗೆ ಭೇಟಿ ನೀಡಿ 

ಪಂಚಮಿತ್ರ ವೆಬ್ಸೈಟ್ ಲಿಂಕ್ https://panchatantra.kar.nic.in/panchamitra/

]]>
Fri, 20 Jun 2025 12:46:59 +0530 shivuagrico
Gruhalakshmi list&ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ,ಫಲಾನುಭವಿ ಪಟ್ಟಿಯಲ್ಲಿ ಯಾವುದೇ ಬದಲಾವಣೆಯಿಲ್ಲ,ಈ ಪಟ್ಟಿಯಲ್ಲಿರುವ ಎಲ್ಲರಿಗೂ ಜಮಾ ಆಗಲಿದೆ ಹಣ https://krushirushi.in/Gruhalakshmi-list-2177 https://krushirushi.in/Gruhalakshmi-list-2177 Gruhalakshmi list-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ,ಫಲಾನುಭವಿ ಪಟ್ಟಿಯಲ್ಲಿ ಯಾವುದೇ ಬದಲಾವಣೆಯಿಲ್ಲ


ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಹಲವರ ಹೆಸರು ಕೈಬಿಡಲಾಗುತ್ತಿದೆ ಎಂದು ವದಂತಿ ಹರಿದಾಡುತ್ತಿತ್ತು. ಈ ಬಗ್ಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಆಗುತ್ತಿದೆಯೇ ಎಂಬ ಪ್ರಶ್ನೆಗೆ, ಆತಂಹ ಸಮಸ್ಯೆ ಏನೂ ಇಲ್ಲ ಎಂದರು.

ಈ‌ಗಾಗಲೇ ಏಪ್ರಿಲ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ನಮಗೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ನಮ್ಮ ಇಲಾಖೆಯ ಬದಲಾಗಿ ಈಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮೂಲಕ ಹಣ ಸಂದಾಯವಾಗುತ್ತಿದೆ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆಗೆ ಯಾವುದೇ ತೊಂದರೆ ಇಲ್ಲ

ಗೃಹಲಕ್ಷ್ಮಿ ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಳಜಿ ಇದೆ‌. ಯೋಜನೆಗೆ ಯಾವುದೇ ತೊಂದರೆ ಇಲ್ಲ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ ಎಂದು ಉತ್ತರಿಸಿದರು.

ಪ್ರತಿ ತಿಂಗಳು ಫಲಾನುಭವಿಗಳ ಸಂಖ್ಯೆ ಹೆಚ್ಚಳ

ಪ್ರತಿ ತಿಂಗಳು 10 ರಿಂದ 15 ಸಾವಿರ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿದೆ. ನೋಂದಣಿ ಮಾಡಿಕೊಂಡ ಎಲ್ಲಾ ಫಲಾನುಭವಿಗಳಿಗೆ ಹಣ ತಲುಪುತ್ತಿದೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Fri, 20 Jun 2025 08:54:08 +0530 shivuagrico
Mobile canteen subsidy&ಮೊಬೈಲ್‌ ಕ್ಯಾಂಟೀನ್‌ ತೆರೆಯಲು ಸಿಗಲಿದೆ 5 ಲಕ್ಷ ರೂ.ಗಳ ಸಹಾಯಧನ: ಯಾರೆಲ್ಲಾ ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ? https://krushirushi.in/Mobile-canteen-subsidy-2176 https://krushirushi.in/Mobile-canteen-subsidy-2176 Mobile canteen subsidy-ಮೊಬೈಲ್‌ ಕ್ಯಾಂಟೀನ್‌ ತೆರೆಯಲು ಸಿಗಲಿದೆ 5 ಲಕ್ಷ ರೂ.ಗಳ ಸಹಾಯಧನ: ಯಾರೆಲ್ಲಾ ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ?


ಏನಿದು ಮೊಬೈಲ್‌ ಕ್ಯಾಂಟೀನ್‌ ಸಬ್ಸಿಡಿ ಯೋಜನೆ?
ಕರ್ನಾಟಕ ಸರ್ಕಾರವು ನಿರುದ್ಯೋಗಿ ಯುವಕರಿಗೆ ತಮ್ಮದೇ ಆದ ವ್ಯವಹಾರವನ್ನು ಪ್ರಾರಂಭಿಸಲು ಸಹಾಯ ಮಾಡಲು ಮೊಬೈಲ್ ಕ್ಯಾಂಟೀನ್ ಸಬ್ಸಿಡಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯು ವ್ಯಕ್ತಿಗಳಿಗೆ ಸಂಚಾರಿ ಕ್ಯಾಂಟೀನ್‌ ವಾಹನಗಳನ್ನು ಖರೀದಿಸಲು ಮತ್ತು ನಿರ್ವಹಿಸಲು ಸಹಾಯಧನವನ್ನು ಒದಗಿಸುತ್ತದೆ. ಅರ್ಹ ಫಲಾನುಭವಿಗಳಿಗೆ 5 ಲಕ್ಷ ರೂ.ವರೆಗೆ ಸಹಾಯಧನ ಪಡೆಯಬಹುದಾಗಿದೆ. ಇದು ವಾಹನದ ವೆಚ್ಚದ ಗಮನಾರ್ಹ ಭಾಗವನ್ನು ಒಳಗೊಂಡಿರುತ್ತದೆ ಮತ್ತು ಇದು ರಾಜ್ಯದ ಪ್ರವಾಸೋದ್ಯಮ ಇಲಾಖೆಯ ಉಪಕ್ರಮಗಳ ಭಾಗವಾಗಿದೆ.



ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ/ಕೌಶಲ್ಯ ತರಬೇತಿ ಹಾಗೂ ತರಬೇತಿ ಪಡೆದ ಬಳಿಕ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ಉದ್ದಿಮೆಯನ್ನು ಆರಂಭಿಸಲು ಸಬ್ಸಿಡಿಯನ್ನು ಪಡೆಯಲು ಈ ಯೋಜನೆಯಡಿ ಅವಕಾಶವಿರುತ್ತದೆ. ಅದೇ ರೀತಿ ಅತಿಥ್ಯ ಕ್ಷೇತ್ರದಲ್ಲಿ ಸಣ್ಣ ಉದ್ಯಮಿದಾರರಾಗಲು ಅಭ್ಯರ್ಥಿಗಳಿಗೆ ಊಟ, ವಸತಿ ಹಾಗೂ ಪ್ರೋತ್ಸಾಹಧನ ಜೊತೆಗೆ ಕೆಎಸ್‌ಟಿಡಿಸಿ ಸಂಸ್ಥೆಯ ಮೂಲಕ ಒಂದು ತಿಂಗಳು ತರಬೇತಿ ನೀಡಲಾಗುವುದು.

ಯೋಜನೆಯ ಪ್ರಮುಖ ಅಂಶಗಳು

  1. ಉದ್ದೇಶಿತ ಫಲಾನುಭವಿಗಳು: ಈ ಯೋಜನೆಯು ಪ್ರಾಥಮಿಕವಾಗಿ ನಿರುದ್ಯೋಗಿ ಯುವಕರನ್ನು ಗುರಿಯಾಗಿಸಿಕೊಂಡಿದ್ದು, ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಯೋಜನೆ ಅನ್ವಯವಾಗಲಿದೆ.
  2. ಸಬ್ಸಿಡಿ ಮೊತ್ತ: ಅರ್ಹ ವ್ಯಕ್ತಿಗಳು ಮೊಬೈಲ್ ಕ್ಯಾಂಟೀನ್ ಸ್ಥಾಪಿಸಲು 5 ಲಕ್ಷ ರೂ.ವರೆಗೆ ಸಬ್ಸಿಡಿ ಪಡೆಯಬಹುದು.
  3. ಪ್ರವಾಸೋದ್ಯಮ ನೀತಿ: ಸಬ್ಸಿಡಿಯನ್ನು ಪ್ರವಾಸೋದ್ಯಮ ಸಂಬಂಧಿತ ವ್ಯವಹಾರಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಕರ್ನಾಟಕ ಪ್ರವಾಸೋದ್ಯಮ ನೀತಿ 2020-25ಕ್ಕೆ ಲಿಂಕ್ ಮಾಡಲಾಗಿದೆ.
  4. ತರಬೇತಿ: ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ಉದ್ದಿಮೆ ಆರಂಭಿಸಲು ಒಂದು ತಿಂಗಳ ಉದ್ಯಮಶೀಲತೆ/ಕೌಶಲ್ಯ ತರಬೇತಿ ಹಾಗೂ ತರಬೇತಿ ನೀಡಲಾಗುತ್ತದೆ.

ಮೊಬೈಲ್‌ ಕ್ಯಾಂಟೀನ್‌ ಯೋಜನೆಯ ಉದ್ದೇಶ ಏನು?ರಾಜ್ಯದಲ್ಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಯುವಕರಿಗೆ ಆರ್ಥಿಕ ಸಬಲೀಕರಣವನ್ನು ನೀಡುವುದು ಮತ್ತು ಸ್ವ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವುದು ಈ ಯೋಜನೆಯ ಪ್ರಧಾನ ಉದ್ದೇಶ.

ಯೋಜನೆಯಡಿ ದೊರೆಯುವ ಸಹಾಯಧನ ಎಷ್ಟು?ಅರ್ಜಿ ಸಲ್ಲಿಸಿದ ಬಳಿಕ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟಿನ್ ಅನ್ನು ಆರಂಭಿಸಲು ಒಟ್ಟು ಘಟಕ ವೆಚ್ಚಕ್ಕೆ ಶೇ 70 ರಷ್ಟು ಗರಿಷ್ಠ 5 ಲಕ್ಷದ ವರೆಗೆ ಸಹಾಯಧನವನ್ನು ಒದಗಿಸಲಾಗುತ್ತದೆ.

ಅರ್ಹತಾ ಮಾನದಂಡಗಳೇನು?ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನ ನಿಬಂಧನೆಗಳನ್ನು ಪೂರೈಸಬೇಕು

  • ರಾಜ್ಯದ ಮೂಲ ನಿವಾಸಿ ಆಗಿರಬೇಕು.
  • ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕೆ ಸೇರಿದವರಾಗಿರಬೇಕು.
  • ಕನಿಷ್ಠ SSLC ಉತ್ತೀರ್ಣ ಆಗಿರಬೇಕು.
  • ವಯಸ್ಸು 20ರಿಂದ 45 ವರ್ಷದೊಳಗೆ ಇರಬೇಕು.
  • ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
  • ನಗರ ನಿವಾಸಿಗಳಿಗೆ ವಾರ್ಷಿಕ ಆದಾಯ 2 ಲಕ್ಷ ರೂ.ಕ್ಕಿಂತ ಕಡಿಮೆ ಇರಬೇಕು.
  • ಗ್ರಾಮಾಂತರ ನಿವಾಸಿಗಳಿಗೆ ಆದಾಯ ಮಿತಿ 1.5 ಲಕ್ಷ ರೂ. ನಿಗದಿಪಡಿಸಲಾಗಿದೆ
  • ಅರ್ಜಿದಾರ ಅಥವಾ ಕುಟುಂಬದ ಸದಸ್ಯರು ಸರ್ಕಾರಿ ನೌಕರರಾಗಿರಬಾರದು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು?

  • ಅರ್ಜಿ ನಮೂನೆ (ಸ್ಥಳೀಯ ಪ್ರವಾಸೋದ್ಯಮ ಇಲಾಖೆಯಲ್ಲಿ ಲಭ್ಯ)
  • ಆಧಾರ್ ಕಾರ್ಡ್ ಪ್ರತಿ
  • ಪಾಸ್‌ಪೋರ್ಟ್ ಗಾತ್ರದ 2 ಭಾವಚಿತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • SSLC ಅಂಕಪಟ್ಟಿ
  • ಲಘು ವಾಹನ ಚಾಲನಾ ಪರವಾನಗಿ
  • ಅಫಿಡೆವಿಟ್ (ರೂ.50 ಛಾಪಾ ಕಾಗದದಲ್ಲಿ, ನೌಕರರಲ್ಲ ಎಂಬ ಪ್ರಮಾಣ ಪತ್ರ)

ಇದನ್ನೂ ಓದಿ: ವೃತ್ತಿ ಪ್ರೋತ್ಸಾಹ ಸಾಲ ಯೋಜನೆ: ಸ್ವಂತ ವೃತ್ತಿ ಕೈಗೊಳ್ಳಲು 1 ಲಕ್ಷ ರೂ.ವರೆಗಿನ ಸಾಲಕ್ಕೆ 50% ಸಹಾಯಧನ! ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಕೆಯ ವಿಧಾನ ಹೇಗೆ?

  • ನಿಮ್ಮ ಜಿಲ್ಲೆಯಲ್ಲಿ ಇರುವ ಪ್ರವಾಸೋದ್ಯಮ ಇಲಾಖೆ ಕಚೇರಿಗೆ ಭೇಟಿ ನೀಡಿ.
  • ಮೊಬೈಲ್‌ ಕ್ಯಾಂಟೀನ್‌ ಆರಂಭಿಸಲು ಅರ್ಜಿ ನಮೂನೆ ಪಡೆದು, ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ.
  • ಅರ್ಜಿ ಪರಿಶೀಲನೆಯ ನಂತರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಉದ್ಯಮಶೀಲತೆ ತರಬೇತಿ ನೀಡಲಾಗುತ್ತದೆ.
  • ತರಬೇತಿ ಯಶಸ್ವಿಯಾಗಿ ಪೂರ್ಣಗೊಳಿಸಿದ ಬಳಿಕ, ಸಬ್ಸಿಡಿ ಅನುದಾನವನ್ನು ಬಿಡುಗಡೆ ಮಾಡಲಾಗುತ್ತದೆ.

ಗಮನಿಸಿ: ಈ ಯೋಜನೆ ಅನುದಾನ ಲಭ್ಯತೆಯ ಆಧಾರದ ಮೇಲೆ ರಾಜ್ಯದ ಕೆಲವು ಆಯ್ದ ಜಿಲ್ಲೆಗಳಿಗೆ ಮಾತ್ರ ಅನ್ವಯಿಸುತ್ತದೆ. ಅರ್ಜಿದಾರರು ತಮ್ಮ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಕಚೇರಿಯನ್ನು ಭೇಟಿಯಾಗಿ ಯೋಜನೆಯ ಲಭ್ಯತೆ, ಅರ್ಜಿ ಸ್ವೀಕಾರ ದಿನಾಂಕ, ತರಬೇತಿ ಕೇಂದ್ರಗಳ ವಿವರಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು.

ಸಂಪರ್ಕ ಮಾಹಿತಿ:ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿ, ರಂಗಾಯಣ ಆವರಣ, ಬೆಂಗಳೂರು. ದೂರವಾಣಿ ಸಂಖ್ಯೆ: 0836-295552


ಪ್ರಶ್ನೋತ್ತರಗಳು

  1. ಯಾರು ಈ ಮೊಬೈಲ್ ಕ್ಯಾಂಟಿನ್ ಯೋಜನೆಗೆ ಅರ್ಜಿ ಸಲ್ಲಿಸಬಹುದು?
    ಈ ಯೋಜನೆಗೆ ಅರ್ಜಿ ಸಲ್ಲಿಸಬಲ್ಲವರು ಕರ್ನಾಟಕದ ನಿವಾಸಿಯಾಗಿದ್ದು, ಪರಿಶಿಷ್ಟ ಜಾತಿ (SC) ಅಥವಾ ಪರಿಶಿಷ್ಟ ಪಂಗಡ (ST) ಸಮುದಾಯಕ್ಕೆ ಸೇರಿದವರು ಆಗಿರಬೇಕು. ವಯಸ್ಸು 20ರಿಂದ 45ರೊಳಗಿನವರಾಗಿದ್ದು, ಕನಿಷ್ಠ SSLC ಉತ್ತೀರ್ಣರಾಗಿರಬೇಕು ಮತ್ತು ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
  2. ಮೊಬೈಲ್ ಕ್ಯಾಂಟಿನ್ ಸ್ಥಾಪನೆಗಾಗಿ ಎಷ್ಟು ಸಹಾಯಧನ ಸಿಗುತ್ತದೆ?
    ಘಟಕ ವೆಚ್ಚದ ಶೇ.70ರಷ್ಟು, ಗರಿಷ್ಠ ₹5 ಲಕ್ಷವರೆಗೆ ಸಹಾಯಧನ ಸಿಗುತ್ತದೆ. ಇದು ವಾಹನ ಖರೀದಿ ಮತ್ತು ಉದ್ದಿಮೆ ಆರಂಭದ ಇತರೆ ವೆಚ್ಚಗಳಿಗೆ ಬಳಸಬಹುದಾದದು.
  3. ಈ ಯೋಜನೆಯಡಿಯಲ್ಲಿ ತರಬೇತಿ ನೀಡಲಾಗುತ್ತದೆಯೆ?
    ಹೌದು, ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಒಂದು ತಿಂಗಳ ಉದ್ಯಮಶೀಲತೆ ಮತ್ತು ಕೌಶಲ್ಯ ತರಬೇತಿ ನೀಡಲಾಗುತ್ತದೆ. ತರಬೇತಿಯಲ್ಲಿ ಊಟ, ವಸತಿ ಹಾಗೂ ಪ್ರೋತ್ಸಾಹ ಧನವನ್ನು ಕೂಡ ಒದಗಿಸಲಾಗುತ್ತದೆ.
  4. ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಅಗತ್ಯವಿವೆ?
    ಅಧಿಕೃತ ಅರ್ಜಿ ನಮೂನೆ, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಗಾತ್ರದ 2 ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, SSLC ಪ್ರಮಾಣ ಪತ್ರ, ಲಘು ವಾಹನ ಚಾಲನಾ ಪರವಾನಗಿ, ಹಾಗೂ ನೌಕರರಲ್ಲ ಎಂಬ ಅಫಿಡೆವಿಟ್ (₹50 ಛಾಪಾ ಕಾಗದದಲ್ಲಿ) ಅಗತ್ಯವಿದೆ.
  5. ಅರ್ಜಿ ಎಲ್ಲಿಗೆ ಮತ್ತು ಹೇಗೆ ಸಲ್ಲಿಸಬೇಕು?
    ನಿಮ್ಮ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆ ಪಡೆದು, ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಅರ್ಜಿ ಪರಿಶೀಲನೆಯ ಬಳಿಕ ಆಯ್ಕೆಯಾದವರಿಗೆ ತರಬೇತಿ ನೀಡಲಾಗುತ್ತದೆ ಮತ್ತು ನಂತರ ಸಹಾಯಧನ ಬಿಡುಗಡೆ ಮಾಡಲಾಗುತ್ತದೆ.




ಮೊಬೈಲ್‌ ಕ್ಯಾಂಟೀನ್‌ ಸಬ್ಸಿಡಿ ಯೋಜನೆಯ ಗುಣಲಕ್ಷಣಗಳು

ಗುಣಲಕ್ಷಣಗಳು ವಿವರಗಳು
ಯೋಜನೆಯ ಹೆಸರು ಮೊಬೈಲ್ ಕ್ಯಾಂಟಿನ್ ಸಬ್ಸಿಡಿ ಯೋಜನೆ
ಇಲಾಖೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ
ಉದ್ದೇಶ ನಿರುದ್ಯೋಗಿ ಯುವಕರಿಗೆ ಸ್ವ ಉದ್ಯೋಗ ಅವಕಾಶ ಕಲ್ಪಿಸಿ ಆರ್ಥಿಕ ಸ್ವಾವಲಂಬಿಗಳನ್ನಾಗಿಸುವುದು
ಅರ್ಹ ಫಲಾನುಭವಿಗಳು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಸಮುದಾಯದ 20-45 ವರ್ಷದವರು
ಸಹಾಯಧನ ಪ್ರಮಾಣ ಗರಿಷ್ಠ 5 ಲಕ್ಷ ರೂ. (ಘಟಕ ವೆಚ್ಚದ 70% ವರೆಗೆ)
ಅರ್ಜಿ ಸಲ್ಲಿಸುವ ವಿಧಾನ ಜಿಲ್ಲಾ ಪ್ರವಾಸೋದ್ಯಮ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆ ಪಡೆದು, ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ತರಬೇತಿ ಉಚಿತ ಉದ್ಯಮಶೀಲತೆ/ಕೌಶಲ್ಯ ತರಬೇತಿ – 1 ತಿಂಗಳು (KSRTC ಮೂಲಕ ಊಟ, ವಸತಿ, ಪ್ರೋತ್ಸಾಹಧನದೊಂದಿಗೆ)
ದೂರವಾಣಿ ಸಂಖ್ಯೆ

0836-2955522

]]>
Thu, 19 Jun 2025 14:14:56 +0530 shivuagrico
Bele parihara&ಮಳೆಯಿಂದಾದ ಬೆಳೆ ಹಾಗೂ ಮನೆ ಹಾನಿಗೆ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ,ಯಾರಿಗೆ ಎಷ್ಟು ಪರಿಹಾರ ಸಿಗಲಿದೆ? https://krushirushi.in/Bele-parihara-2175 https://krushirushi.in/Bele-parihara-2175 Bele parihara-ಮಳೆಯಿಂದಾದ ಬೆಳೆ ಹಾಗೂ ಮನೆ ಹಾನಿಗೆ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ,ಯಾರಿಗೆ ಎಷ್ಟು ಪರಿಹಾರ ಸಿಗಲಿದೆ?

ರಾಜ್ಯ ಸರ್ಕಾರದಿಂದ ನೈರುತ್ಯ ಮುಂಗಾರು ಹಂಗಾಮು, ಈಶಾನ್ಯ ಮುಂಗಾರು ಹಂಗಾಮಿನಲ್ಲಿನ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾಗುವ ಮನೆಗಳ ಪುನರ್ ನಿರ್ಮಾಣ, ದುರಸ್ಥಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿ ಆದೇಶಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ SDRF | NDRF ರಡಿ ನೀಡಬಹುದಾದ ಪರಿಹಾರಗಳ ಕುರಿತು ಭಾರತ ಸರ್ಕಾರದ ಗ್ರಹ ಮಂತ್ರಾಲಯವು ಮೇಲೆ ಓದಲಾದ (1) ರಂತೆ ಹೊರಡಿಸಿರುವ SDRF / NDRF Items and Norms of Assistance ರ ಮಾರ್ಗಸೂಚಿಗಳಲ್ಲಿ ನಿಗದಿಪಡಿಸಿರುವ ಪರಿಹಾರ ಮೊತ್ತದ ಜೊತೆಗೆ, 2024-25 ನೇ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ (01.06.2025 ರಿಂದ 30.09.2025) ಮತ್ತು ಈಶಾನ್ಯ ಮುಂಗಾರು ಹಂಗಾಮಿನಲ್ಲಿ (01.10.2025 ರಿಂದ 31.12.2025) ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪುವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಹೆಚ್ಚುವರಿ ಮೊತ್ತವನ್ನು ನಿಗದಿಪಡಿಸಿ, ಸದರಿ ಪರಿಹಾರ ಮೊತ್ತವನ್ನು ಪಾವತಿಸಲು ಜಿಲ್ಲಾಧಿಕಾರಿಗಳು ಅನುಸರಿಸಬೇಕಾಗಿರುವ ಕ್ರಮಗಳ ಮತ್ತು ಷರತ್ತುಗಳ ಕುರಿತು ಮೇಲೆ ಓದಲಾದ (2), (3) ಮತ್ತು (4) ರ ಆದೇಶಗಳಲ್ಲಿ ಸೂಚನೆಗಳನ್ನು ನೀಡಲಾಗಿರುತ್ತದೆ.

ಪುಸ್ತುತ ಭಾರತೀಯ ಹವಾಮಾನ ಇಲಾಖೆಯು ನೈಋತ್ಯ ಮುಂಗಾರು (SouthWest) ಹಂಗಾಮು-2025 ರ ಮೊದಲ ಹಂತದ ಕಾರ್ಯಚರಣೆಯ ಧೀರ್ಘ ವ್ಯಾಪ್ತಿಯ ಮುನ್ಸೂಚನೆಯ (LRF) ಪುಕಾರ ಒಟ್ಟಾರೆಯಾಗಿ ದೇಶದಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಮೇಲೆ ಓದಲಾದ (5) ರ ದಿನಾಂಕ: 15.05.2025 ರಂದು ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತದೆ. ಹಾಗಾಗಿ, ಪ್ರಸಕ್ತ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಮನೆ ಹಾನಿಗೆ ಪರಿಹಾರವನ್ನು ಪಾವತಿಸುವ ಬಗ್ಗೆ ಮಾರ್ಗಸೂಚಿಗಳನ್ನು ನೀಡುವುದು ಅವಶ್ಯಕವಾಗಿರುತ್ತದೆವಾದ್ದರಿಂದ, ಅತಿವೃಷ್ಟಿ | ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ 2024-25 ನೇ ಸಾಲಿನಲ್ಲಿ ಪಾವತಿಸಿರುವ ಪರಿಹಾರದಂತೆ 2025-26 ನೇ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ (01.06.2025 ರಿಂದ 30.09.2025) ಮತ್ತು ಈಶಾನ್ಯ ಮುಂಗಾರು ಹಂಗಾಮಿನಲ್ಲಿ (01.10.2025 ರಿಂದ 31.12.2025) ಹಾನಿಗೊಳಗಾಗುವ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ನಿಯಾಮಾನುಸಾರ ಅರ್ಹತೆಯಂತೆ ಜಿಲ್ಲಾಧಿಕಾರಿರವರ ಹಂತದಲ್ಲಿಯೇ ಅವರ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪಾವತಿಸಲು ಸರ್ಕಾರವು ನಿರ್ಧರಿಸಿ ಕೆಳಕಂಡಂತೆ ಆದೇಶಿಸಿದೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಅತಿವೃಷ್ಟಿ | ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ 2024-25 ನೇ ಸಾಲಿನಲ್ಲಿ ಪಾವತಿಸಿರುವ ಕೆಳಕಂಡ ಪರಿಹಾರದಂತೆ, 2025-26 ನೇ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ (01.06.2025 ರಿಂದ 30.09.2025) ಮತ್ತು ಈಶಾನ್ಯ ಮುಂಗಾರು ಹಂಗಾಮಿನಲ್ಲಿ (01.10.2025 ರಿಂದ 31.12.2025) ಹಾನಿಗೊಳಗಾಗುವ ಮನೆಗಳ ಪುನರ್ ನಿರ್ಮಾಣ / ದುರ ಕಾರ್ಯ ಹಾಗೂ ಪುವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ನಿಯಾಮಾನುಸಾರ ಅರ್ಹತೆಯಂತೆ ಪರಿಹಾರವನ್ನು ಮೇಲೆ ಓದಲಾದ (2), (3) ಮತ್ತು (4) ರ ಆದೇಶಗಳಲ್ಲಿ ವಿಧಿಸಿರುವ ಷರತ್ತುಗಳ ಪಾಲನೆಗೆ ಒಳಪಟ್ಟು, ಜಿಲ್ಲಾಧಿಕಾರಿರವರ ಹಂತದಲ್ಲಿಯೇ ಅವರ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪಾವತಿಸಲು ಸರ್ಕಾರದ ಮಂಜೂರಾತಿ ನೀಡಿ, ಆದೇಶಿಸಿದೆ.

ಪ್ರವಾಹದಿಂದ ಹಾನಿಗೊಳಗಾದ ಮನೆಗಳನ್ನು 02 ವರ್ಗಗಳಲ್ಲಿ (ಪೂರ್ಣ ಹಾನಿಯಾದ ಮನೆಗಳ ಮರು ನಿರ್ಮಾಣ ಮತ್ತು ಭಾಗಶ: ಹಾನಿಯಾದ ಮನೆಗಳ ದುರಸ್ತಿ) ವಿಂಗಡಿಸಿ ಪರಿಹಾರ ಪಾವತಿಸುವುದು.


ಪೂರ್ಣಹಾನಿಯಾದ ಮನೆಗಳಿಗೆ ಭಾರತ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ:11/07/2023ರಂದು ಹೊರಡಿಸಿರುವ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ / ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ವಯ ರೂ.1.20 ಲಕ್ಷಗಳ ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ ವಸತಿ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ದೇವರಾಜ್ ಅರಸು ವಸತಿ ಯೋಜನೆಯಡಿ ಮನೆ ನೀಡುವುದು. ದೇವರಾಜ್ ಅರಸು ವಸತಿ ಯೋಜನೆಯಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸಾಮಾನ್ಯ ವರ್ಗಗಳಿಗೆ ಮಂಜೂರು ಮಾಡುವ ಮನೆಗೆ ರೂ.1.20 ಲಕ್ಷ ಮತ್ತು ಎಸ್ಸಿ/ಎಸ್‌ಟಿ ವರ್ಗಗಳಿಗೆ ಮಂಜೂರು ಮಾಡುವ ಮನೆಗೆ ರೂ.1.50 ಲಕ್ಷ ಮಂಜೂರು ಮಾಡುವುದು. ಈ ಮನೆಗಳನ್ನು ಜಿಲ್ಲಾಧಿಕಾರಿಗಳು ಅನುಮೋದನೆ ಮಾಡಿ ವಿವರಗಳೊಂದಿಗೆ ಫಲಾನುಭವಿಗಳ ಪಟ್ಟಿಯನ್ನು RGRHCL ಪರಿಹಾರ ತಂತ್ರಾಂಶದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ವಿವರಗಳನ್ನು ದಾಖಲಿಸುವುದು.
ಅನಧಿಕೃತ ಜಮೀನಿನಲ್ಲಿ ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ಒಂದು ಬಾರಿ ಪರಿಹಾರವಾಗಿ ರೂ.1.00 ಲಕ್ಷಗಳನ್ನು ಪಾವತಿಸುವುದು ಮತ್ತು ಯಾವುದೇ ಮನೆಯನ್ನು ಮಂಜೂರು ಮಾಡುವಂತಿಲ್ಲ.

ಭಾರತ ಸರ್ಕಾರದ ಗ್ರಹ ಮಂತ್ರಾಲಯವು ದಿನಾಂಕ:11/07/2023ರಂದು ಹೊರಡಿಸಿರುವ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ / ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ವಯ ಭಾಗಶಃ ಹಾನಿಗೊಳಗಾದ ಮನೆಗಳ ದುರಸ್ತಿಗೆ ಕನಿಷ್ಟ ರೂ.6,500/- ಗಳಿಂದ ಗರಿಷ್ಮ ರೂ.50,000/-ಗಳನ್ನು ಈ ಕೆಳಕಂಡಂತೆ ಪಾರದರ್ಶಕ ಮಾನದಂಡಗಳನ್ವಯ ಅರ್ಹತೆಯನುಸಾರ ಪಾವತಿಸುವುದು.

Crop loss compensation-ಮಳೆಯಿಂದಾದ ಬೆಳೆಹಾನಿಗೆ ಪರಿಹಾರ ಪಡೆಯುವುದು ಹೇಗೆ?

ಈ ಬಾರಿ ಮುಂಗಾರು ಆಗಮನ ವಾಡಿಕೆಗಿಂತ ಬೇಗನೆ ಆಗಮಿಸಿದ ಕಾರಣ ಮೇ ಅಂತ್ಯದ ವೇಳೆಗೆ ಕರ್ನಾಟಕ ಸೇರಿ ಭಾರತದಾದ್ಯಂತ ಭರ್ಜರಿ ಮಳೆಯಾಗುತ್ತಿದೆ. ಆದರೆ ಜೂನ್‌ ಮೊದಲ ವಾರದಲ್ಲಿ ಕೊಂಚ ಮಳೆ ಪ್ರಮಾಣ ಕಡಿಮೆಯಾದರೂ ಸಹ ಕರ್ನಾಟಕದಲ್ಲಿ ಜೂನ್‌ 8ರಿಂದ ಮಳೆ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.


ಇನ್ನು, ಪ್ರತಿ ವರ್ಷವೂ ದೇಶದ ಹಲವು ರಾಜ್ಯಗಳಲ್ಲಿ ಮಳೆ ಮತ್ತು ಪ್ರವಾಹದಿಂದ ಮಾನ್ಸೂನ್ ಹಾನಿಯನ್ನು ಉಂಟು ಮಾಡುತ್ತದೆ. ಉತ್ತರ ಪ್ರದೇಶ, ಬಿಹಾರದಿಂದ ಈಶಾನ್ಯ ಭಾರತದ ರಾಜ್ಯಗಳವರೆಗೆ ಅನೇಕ ಪ್ರದೇಶಗಳಲ್ಲಿ ಜನರು ಮನೆ ಮತ್ತು ಕೃಷಿ ಬೆಳೆಯನ್ನೂ ಕಳೆದುಕೊಂಡಿದ್ದಾರೆ. ಆದರೆ ಅಂತಹ ವಿಪತ್ತಿನಲ್ಲಿ, ಸರ್ಕಾರವು ಮನೆ ಮತ್ತು ಬೆಳೆ ಕಳೆದುಕೊಂಡವರಿಗೆ ಆರ್ಥಿಕ ಸಹಾಯವನ್ನು ಸಹ ನೀಡುತ್ತದೆ. ನಷ್ಟವನ್ನು ಸರಿದೂಗಿಸಲು ಪರಿಹಾರವನ್ನು ಹೇಗೆ ಪಡೆಯುವುದು ಎಂದು ನೀವು ಮೊದಲು ಸರಿಯಾಗಿ ತಿಳಿದುಕೊಳ್ಳಬೇಕು.

ಆಡಳಿತವು ಹಾನಿ ಸಮೀಕ್ಷೆ ನಡೆಸುತ್ತೆ:

ಸ್ಥಳೀಯ ಆಡಳಿತವು ಮೊದಲು ನೈಸರ್ಗಿಕ ವಿಕೋಪ ಅಥವಾ ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಮೌಲ್ಯಮಾಪನ ಮಾಡುತ್ತದೆ. ಹಾನಿ ತುಂಬಾ ಹೆಚ್ಚಾದಾಗ, ರಾಜ್ಯ ಸರ್ಕಾರ ಪರಿಹಾರ ನಿಧಿ ಅಥವಾ ಪರಿಹಾರವನ್ನು ಘೋಷಿಸುತ್ತದೆ. ಇದಕ್ಕಾಗಿ, ಅಧಿಕಾರಿಗಳು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ವರದಿಯನ್ನು ಸಿದ್ಧಪಡಿಸಿ ರಾಜ್ಯ ಸರ್ಕಾರಕ್ಕೆ ಕಳುಹಿಸುತ್ತಾರೆ.

ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ?

ನಿಮ್ಮ ಮನೆ, ಅಂಗಡಿ ಅಥವಾ ಜಮೀನು, ಬೆಳೆ, ಕೃಷಿ ಭೂಮಿ ಹೀಗೆ ಪ್ರವಾಹ ಅಥವಾ ಮಳೆಯಿಂದ ಯಾವುದೇ ಹಾನಿಗೊಳಗಾಗಿದ್ದರೂ ಸಹ ಮೊದಲು ನೀವು ಸ್ಥಳೀಯ ಆಡಳಿತಕ್ಕೆ ತಿಳಿಸಬೇಕು.

 ಇದು ಅತ್ಯಂತ ಮುಖ್ಯವಾದ ಹಾಗೂ ನೆನಪಿನಲ್ಲಿಟ್ಟುಕೊಳ್ಳಬೇಕಾದ ಸಂಗತಿಯಾಗಿದೆ.

ಇಲ್ಲಿದೆ ಹಂತ ಹಂತದ ವಿವರ* ಇದಕ್ಕಾಗಿ, ಗ್ರಾಮ ಪಂಚಾಯತ್, ಪುರಸಭೆ ಅಥವಾ ಬ್ಲಾಕ್ ಮಟ್ಟದಲ್ಲಿ ಲಿಖಿತ ಮಾಹಿತಿಯನ್ನು ನೀಡಬಹುದು.* ಆಡಳಿತ ಅಧಿಕಾರಿಗಳು ಹಾನಿಯನ್ನು ಪರಿಶೀಲಿಸುತ್ತಾರೆ ಮತ್ತು ವರದಿಯನ್ನು ಸಿದ್ಧಪಡಿಸುತ್ತಾರೆ.* ವರದಿಯೊಂದಿಗೆ ಬಾಧಿತ ಸ್ಥಳಗಳ ಫೋಟೋಗಳು ಮತ್ತು ವೀಡಿಯೊಗಳನ್ನು ಸಹ ಕಳುಹಿಸಲಾಗುತ್ತದೆ.* ಈ ವರದಿಯು ಜಿಲ್ಲಾಡಳಿತದಿಂದ ರಾಜ್ಯ ಸರ್ಕಾರಕ್ಕೆ ಹೋಗುತ್ತದೆ.* ಇದಾದ ನಂತರ ರಾಜ್ಯ ಸರ್ಕಾರ ಪರಿಹಾರ ಮೊತ್ತವನ್ನು ಘೋಷಿಸುತ್ತದೆ ಮತ್ತು ಪರಿಹಾರವನ್ನು ವಿತರಿಸಲಾಗುತ್ತದೆ.

ಮುಖ್ಯವಾಗಿ ನೆನಪಿನಲ್ಲಿಟ್ಟುಕೊಳ್ಳಬೇಕಾದ ವಿಷಯಗಳು:

> ಪರಿಹಾರಕ್ಕಾಗಿ ಸಾಧ್ಯವಾದಷ್ಟು ಬೇಗ ಮಾಹಿತಿ ನೀಡುವುದು ಇಲ್ಲಿ ಮುಖ್ಯವಾಗುತ್ತದೆ.> ನಷ್ಟಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುರಕ್ಷಿತವಾಗಿಡುವುದು ಮುಖ್ಯ.> ನಿಮ್ಮ ವರದಿಯನ್ನು ಸರಿಯಾಗಿ ಸಲ್ಲಿಸಲು ಸ್ಥಳೀಯ ಅಧಿಕಾರಿಗಳೊಂದಿಗೆ ಸಹಕರಿಸಬೇಕು.> ಇದಾದ ಬಳಿಕ ಪರಿಹಾರವನ್ನು ಸರ್ಕಾರ ಘೋಷಿಸಿದ ಬಳಿಕ ಅಧಿಕಾರಿಗಳ ಬಳಿಕ ಹೋಗಿ ಅಗತ್ಯ ದಾಖಲೆಗಳನ್ನು ನೀಡಿ ಪಡೆಯಬೇಕು.

Crop insurance news-ಮಳೆಯಿಂದ ಬೆಳೆ ಹಾನಿಯಾಗಿ 72 ಗಂಟೆಯೊಳಗೆ ಈ ಕೆಲಸ ಮಾಡಿದವರಿಗೆ ಮಾತ್ರ ಜಮಾ ಆಗಲಿದೆ ಬೆಳೆವಿಮೆ
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಉದ್ದೇಶಬೆಳೆ ವೈಫಲ್ಯದ ಆರ್ಥಿಕ ನಷ್ಟವನ್ನು ಕಡಿಮೆ ಮಾಡುವ ಮೂಲಕ, ಇದು ರೈತರ ಆದಾಯವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ. ಮತ್ತು ರೈತರು ಸ್ಥಿರವಾದ ಆದಾಯವನ್ನು ಹೊಂದಿರುವಾಗ, ಅವರು ಉತ್ತಮ ಕೃಷಿ ಪದ್ಧತಿಗಳಲ್ಲಿ ಹೂಡಿಕೆ ಮಾಡಬಹುದು, ಇದು ಹಲವಾರು ಪ್ರಯೋಜನಗಳನ್ನು ತರುತ್ತದೆ. ಬೆಳೆ ಹಾನಿ/ನಷ್ಟದ ವಿರುದ್ಧ ರೈತರಿಗೆ ಆರ್ಥಿಕ ನೆರವು ನೀಡುವುದು.
ಸ್ಧಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ (Localized calamity) ಆಲೀಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ(ಇನಂಡೇಷನ್), ಮೇಘಸ್ಪೋಟ (Cloud burst) ಮತ್ತು ಗುಡುಗು ಮಿಂಚುಗಳಿಂದಾಗಿ ಉಂಟಾಗುವ ಬೆಂಕಿ ಅವಘಡ (Natural fire due to lightning) ಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯುಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಯೋಜನೆಯಡಿ ಅವಕಾಶವಿರುತ್ತದೆ.
ಒಂದು ವೇಳೆ ಒಂದು ಅಧಿಸೂಚಿತ ಘಟಕದಲ್ಲಿ ಶೇಕಡಾ 25 ಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ಬೆಳೆ ನಷ್ಟವಾದರೆ ಅಧಿಸೂಚಿತ ಘಟಕದಲ್ಲಿ ಬೆಳೆ ವಿಮೆಗೆ ಒಳಪಟ್ಟ ರೈತರಲ್ಲಿಬೆಳೆ ನಷ್ಟವಾದ ರೈತರಿಗೆ ಮಾತ್ರ ಮಾದರಿ ಸಮೀಕ್ಷೆಗನುಗುಣವಾಗಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು.
ಇಂತಹ ಸ್ಧಳೀಯ ಗಂಡಾಂತರಗಳ ಕಾರಣದಿಂದ ಬೆಳೆ ನಷ್ಟಸಂಭವಿಸಿದರೆ, ಬೆಳೆ ವಿಮೆ ಮಾಡಿಸಿರುವ ರೈತರು ಬಗ್ಗೆನೇರವಾಗಿ ಸಂಬಂಧಪಟ್ಟ ಅನುಷ್ಠಾನಗೊಳಿಸುವ ವಿಮಾಸಂಸ್ಥೆಗಳ ಕಛೇರಿಗಳಿಗೆ ಅಥವಾ ಹಣಕಾಸು ಸಂಸ್ಧೆ ಅಥವಾ ಕೃಷಿ/ತೋಟಗಾರಿಕೆ ಇಲಾಖೆ ಮೂಲಕ ತಕ್ಷಣಸೂಚನೆ ನೀಡಬೇಕು.
ಇಂತಹ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆಕಾರಣಗಳನ್ನು 72 ಗಂಟೆಗಳೊಳಗಾಗಿ ತಿಳಿಸಬೇಕು.
ನಷ್ಟದ ಬಗೆಗಿನ ಮಾಹಿತಿಯನ್ನು ಸ್ವೀಕರಿಸಿದ ಮೇಲೆ ವಿಮಾಸಂಸ್ಥೆಗಳು ಬೆಳೆ ನಷ್ಟವನ್ನು ನಿರ್ಧರಿಸುವುದಕ್ಕೆ ನಷ್ಟನಿರ್ಧಾರಕರನ್ನು ಸಂಬಂಧಪಟ್ಟ ಪ್ರದೇಶಕ್ಕೆ 48 ಗಂಟೆಯೊಳಗಾಗಿ ನಿಯೋಜಿಸುವುದು.
ವಿಮೆ ಸಂಸ್ಥೆಯಿಂದ ನೇಮಿಸಲ್ಪಟ್ಟ ನಷ್ಟ ನಿರ್ಧಾರಕರುಮತ್ತು ಸ್ಥಳೀಯ ತಾಲ್ಲೂಕು/ಹೋಬಳಿ ಮಟ್ಟದ ಕೃಷಿ ಮತ್ತುತೋಟಗಾರಿಕಾ ಇಲಾಖಾ ಅಧಿಕಾರಿಗಳು ಜಂಟಿಯಾಗಿ, ಹಾನಿಗೊಳಗಾದ ರೈತರ ಸಮ್ಮುಖದಲ್ಲಿ ಬೆಳೆ ನಷ್ಟನಿರ್ಧರಿಸಲಾಗುವುದು.
ಸದರಿ ಬೆಳೆ ನಷ್ಟದ ವರದಿಯನ್ನು ಜಿಲ್ಲೆಗಳ ಇಲಾಖಾಮುಖ್ಯಸ್ಥರು ಅನುಷ್ಟಾನ ವಿಮಾ ಸಂಸ್ಥೆಗಳಿಗೆ ನೇರವಾಗಿಸಲ್ಲಿಸಲು ಕ್ರಮ ಕೈಗೊಳ್ಳುವುದು.
1. Post Harvest Losses
ಯೋಜನೆಯಡಿ ಬೆಳೆ ಕಟಾವಿನ ನಂತರ ಬೆಳೆಯನ್ನುಜಮೀನಿನಲ್ಲೆ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ (Post Harvest Losses) ಕಟಾವು ಮಾಡಿದ ಎರಡುವಾರಗಳೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕಮಳೆಯಿಂದಾಗಿ ಬೆಳೆ ನಾಶವಾದರೆ ವೈಯುಕ್ತಿಕವಾಗಿ(Case to Case basis) ವಿಮಾ ಸಂಸ್ಧೆಯು ನಷ್ಟ ನಿರ್ಧಾರ ಮಾಡಿಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಒಳಪಡಿಸಲಾಗಿದೆ.
ಬೆಳೆ ವಿಮೆ ಮಾಡಿಸಿದ ರೈತರು ಯಾರಿಗೆ ಸಂಪರ್ಕಿಸಬೇಕು?

ಬೆಳೆ ವಿಮೆ ಮಾಡಿಸಿದ ರೈತರು ಯಾವ ವಿಮಾ ಕಂಪನಿಗೆ ಹಣ ಪಾವತಿಸಿದ್ದಾರೋ ಆ ವಿಮಾ ಕಂಪನಿಗೆ ಸಂಪರ್ಕಿಸಬೇಕು. ಒಂದು ವೇಳೆ ವಿಮಾ ಕಂಪನಿಯ ನಂಬರ್‌ ಗೊತ್ತಿಲ್ಲದಿದ್ದರೆ ಬೆಳೆ ವಿಮೆ ಉಚಿತ ಸಹಾಯವಾಣಿ 1800 180 1551 ನಂಬರಿಗೆ ಕರೆ ಮಾಡಿ ನಿಮ್ಮ ಜಿಲ್ಲೆ ವಿಮಾ ಕಂಪನಿಯ ನಂಬ‌ರ್ ಪಡೆದು ಕರೆ ಮಾಡಬೇಕು.

ಬೆಳೆ ವಿಮೆ ಹಣ ಎಷ್ಟು ಜಮೆಯಾಗುತ್ತದೆ?

ಬೆಳೆ ವಿಮೆ ಮಾಡಿಸಿದ ನಂತರ ಬೆಳೆ ಎಷ್ಟು ಪ್ರಮಾಣದಲ್ಲಿ ಹಾಳಾಗಿದೆ ಹಾಗೂ ಬೆಳೆ ಯಾವ ಹಂತದಲ್ಲಿ ಹಾಳಾಗಿದೆ ಎಂಬುದನ್ನು ನಿರ್ಧರಿಸಿ ರೈತರಿಗೆ ವಿಮೆ ಹಣ ಪಾವತಿಸಲಾಗುವುದು.
]]>
Wed, 18 Jun 2025 22:30:39 +0530 shivuagrico
Panchamitra what’s app service&ಇನ್ನು ಮುಂದೆ ನಿಮ್ಮ ವಾಟ್ಸಪ್ ನಲ್ಲೆ ಸಿಗಲಿವೆ ಗ್ರಾಮ ಪಂಚಾಯತಿಯ ಎಲ್ಲಾ ಸೇವೆಗಳು, ವಾಟ್ಸಪ್ ನಲ್ಲಿ ಹೀಗೆ ಮೇಸೆಜ್ ಮಾಡಿ https://krushirushi.in/Panchamitra-what’s-app-service-2174 https://krushirushi.in/Panchamitra-what’s-app-service-2174 Panchamitra what’s app service-ಇನ್ನು ಮುಂದೆ ನಿಮ್ಮ ವಾಟ್ಸಪ್ ನಲ್ಲೆ ಸಿಗಲಿವೆ ಗ್ರಾಮ ಪಂಚಾಯತಿಯ ಎಲ್ಲಾ ಸೇವೆಗಳು, ವಾಟ್ಸಪ್ ನಲ್ಲಿ ಹೀಗೆ ಮೇಸೆಜ್ ಮಾಡಿ

ಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಅದೇನು ಅಂದ್ರೇ ಜಸ್ಟ್ ಈ ನಂಬರ್ ಗೆ ವಾಟ್ಸಾಪ್ (WhatsApp) ಮಾಡಿ ಸಾಕು.

ಅದು ಹೇಗೆ ಅಂತ ಮುಂದೆ ಓದಿ.

ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಗ್ರಾಮ ಪಂಚಾಯ್ತಿ ಸೇವೆಗಳು ಕುಳಿತಲ್ಲೇ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭಿಸಲಾಗಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಪಡೆಯಬಹುದಾಗಿದೆ.

ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ.

ಕುಂದು-ಕೊರತೆಗಳನ್ನು ಹಾಗೂ ಸಮಸ್ಯೆಗಳನ್ನು ದಾಖಲಿಸಲು ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಪಂಚಮಿತ್ರ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಗ್ರಾಮೀಣ ಜನತೆ ತಮ್ಮೆಲ್ಲಾ ಅಹವಾಲುಗಳನ್ನು ದಾಖಲಿಸಲು ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಬಹುದು. ಅಥವಾ ಅದೇ ಸಂಖ್ಯೆಯಲ್ಲಿ ವಾಟ್ಸಾಪ್ ಚಾಟ್ ಮೂಲಕವೂ ಅಹವಾಲು ಸಲ್ಲಿಸಬಹುದು.

 ಸಾರ್ವಜನಿಕರು ತಮಗೆ ಅವಶ್ಯಕತೆ ಇರುವ ಗ್ರಾ.ಪಂ.ಗಳಲ್ಲಿ ಲಭ್ಯ ಸೇವೆಗಳಿಗೆ ಅರ್ಜಿ ಸಲ್ಲಿಸಲು, ವಿವಿಧ ಮಾಹಿತಿ, ವಿವರಗಳನ್ನು ಪಡೆಯಲು ಹಲವಾರು ವೆಬ್​ಸೈಟ್‌ ಮತ್ತು ಪೋರ್ಟಲ್​ಗಳಿಗೆ ಭೇಟಿ ನೀಡಬೇಕಾಗಿತ್ತು. ಅಲ್ಲದೇ, ಗ್ರಾ.ಪಂ.ಗಳಿಗೆ ಸಂಬಂಧಿಸಿದ ಎಲ್ಲಾ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಲು ಯಾವುದೇ ನಿರ್ದಿಷ್ಟವಾದ ವೆಬ್​ಸೈಟ್‌ ಅಥವಾ ಪೋರ್ಟಲ್​ಗಳು ಇರಲಿಲ್ಲ. ಈ ಹಿನ್ನೆಲೆಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ಪಂಚಮಿತ್ರ ಎಂಬ ವಿನೂನತ ವಾಟ್ಸ್‌ಆ್ಯಪ್‌ ಚಾಟ್‌ ಅನ್ನು ಅನುಷ್ಠಾನಕ್ಕೆ ತರಲಾಗಿದೆ. ಪಂಚಮಿತ್ರದ ವಾಟ್ಸ್‌ಆ್ಯಪ್‌ ನಂ. 8277506000 ಮೂಲಕವೇ ಇನ್ನು ಮುಂದೆ ಸಾರ್ವಜನಿಕರು ಗ್ರಾ.ಪಂ.ಗಳಗಳಲ್ಲಿ ಲಭ್ಯವಿರುವ ಕಟ್ಟಡ ನಿರ್ಮಾಣ ಲೈಸೆನ್ಸ್, ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜಿನ ಸಂಪರ್ಕ ಕಡಿತ, ವ್ಯಾಪಾರ ಪರವಾನಗಿ ಸೇರಿದಂತೆ ಇತರೆ ಎಲ್ಲ ಸೇವೆಗಳಿಗೆ ಅರ್ಜಿ ಸಲ್ಲಿಸಬಹುದು. ಬಳಿಕ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಅದೇ ರೀತಿ ತಮ್ಮ ಗ್ರಾಂ.ಪಂ. ವ್ಯಾಪ್ತಿಯ ಬೀದಿ ದೀಪ ನಿರ್ವಹಣೆ, ಕುಡಿಯುವ ನೀರು, ರಸ್ತೆ-ಸೇತುವೆ ದುರಸ್ತಿ, ತ್ಯಾಜ್ಯ ನಿರ್ವಹಣೆ ಸಮಸ್ಯೆ, ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆಗೆ ಮತ್ತು ಪಂಚಾಯತ್‌ ರಾಜ್‌ ವಿಷಯಗಳಿಗೆ ಸಂಬಂಧಿತ 78 ವ‌ರ್ಗಗಳ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಬಹುದಾಗಿದೆ ಹಾಗೂ ಕುಂದುಕೊರತೆಯ ಸ್ಥಿತಿಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸಬಹುದಾಗಿದೆ.

ಅಲ್ಲದೆ, ಚುನಾಯಿತ ಪ್ರತಿನಿಧಿಗಳ ವಿವರಗಳು, ಅಧಿಕಾರಿ, ಸಿಬ್ಬಂದಿ ವಿವರಗಳು, ಪೂರ್ಣಗೊಂಡ ಗ್ರಾಮ ಪಂಚಾಯಿತಿ ಸಭೆಗಳ ನಡಾವಳಿಗಳು, ಗ್ರಾಮ ಪಂಚಾಯಿತಿಗಳ ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು, ಟೆಂಡರ್‌ಗಳು, ಸೇವೆಗಳ ವಿವರಗಳು, ಸ್ವ-ಸಹಾಯ ಗುಂಪಿನ ವಿವರಗಳು, ಆರ್‌ಟಿಐ ದಾಖಲೆಗಳು ಲಭ್ಯವಾಗಲಿವೆ.

ವಾಟ್ಸಪ್ ಚಾಟ್‌ನಲ್ಲಿ  ಮಾಹಿತಿ ಪಡೆಯೋದು ಹೇಗೆ?

ನಿಮ್ಮ ಮೊಬೈಲ್‌ನಲ್ಲಿ ಇಲಾಖೆಯ ವಾಟ್ಸ್‌ಆ್ಯಪ್‌ ಚಾಟ್‌ ನಂಬರ್‌- 8277506000 ಅನ್ನು ಸೇವ್‌ ಮಾಡಿಕೊಂಡು ಚಾಟ್‌ ಆರಂಭಿಸಿ, Hi ಎಂದು ಮೇಸೆಜ್ ಮಾಡಿ

ನಂತರ ಭಾಷೆಯನ್ನು ಆಯ್ಕೆ ಮಾಡಿ

ನಂತರ ತಾನಾಗಿಯೇ ಕೆಲ ಆಯ್ಕೆಗಳು ಆರಂಭವಾಗುತ್ತಾ ಸಾಗುತ್ತದೆ. ಕ್ರಮ ಸಂಖ್ಯೆಗಳನ್ನು ನಮೂದಿಸುವ ಮೂಲಕ ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮ ಆಯ್ಕೆ ಮಾಡಿಕೊಳ್ಳಿ

 ನೀವು ಬಯಸುವ ಗ್ರಾ.ಪಂಚಾಯಿತಿ ಆಯ್ಕೆ ಮಾಡಿಕೊಂಡು ಅಲ್ಲಿನ ಚುನಾಯಿತಿ ಪ್ರತಿನಿಧಿಗಳು, ಸಿಬ್ಬಂದಿಯ ಮಾಹಿತಿ ಪಡೆಯಬಹುದು.

ಅದೇ ರೀತಿ ಸ್ವಾಧೀನ ಪ್ರಮಾಣಪತ್ರ, ರಸ್ತೆ, ಅಗೆವುದಾಕ್ಕಾಗಿ ಅನುಮತಿ, ಕೈಗಾರಿಕಾ/ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ, ನಿರಾಕ್ಷೇಪಣಾ ಪತ್ರ, ನರೇಗಾ ಅಡಿಯಲ್ಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ, ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು, ಹೊಸ/ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ/ನಿಯಮಿತಗೊಳಿವಿಕರ, ಹೊಸ/ಅಸ್ತಿತ್ವದಲ್ಲಿರುವ ಓವರ್‌ಗೌಂಡ್ ಕೇಬಲ್ ಮೂಲಸೌಕರ್ಯ/ಭೂಗತ ಕೇಬಲ್ ಮೂಲಸೌಕರ್ಯಗಳ ಅನುಮತಿ/ನಿಯಮಿತಗೊಳಿಸುವಿಕೆ, ನಮೂನೆ 9/11ಎ, ನಮೂನೆ 11 ಬಿ ಸೇರಿ ಎಲ್ಲ ಸೇವೆಗಳಿಗೆ ಅರ್ಜಿ ಸಲ್ಲಿಸಬಹುದು. ಕುಂದುಕೊರತೆಗಳನ್ನು ದಾಖಲಿಸಬಹುದು.

ಈ ಮೇಲಿನ ನಾಡಕಛೇರಿ ಸೇವೆಗಳನ್ನು ಪಡೆಯಲು, (https://nadakacheri.karnataka.gov.in/Online_service/loginpage.aspx ) ವೆಬ್‌ ಸೈಟ್‌ ಗೆ ಭೇಟಿ ನೀಡಿ 

ಪಂಚಮಿತ್ರ ವೆಬ್ಸೈಟ್ ಲಿಂಕ್ https://panchatantra.kar.nic.in/panchamitra/

]]>
Wed, 18 Jun 2025 14:06:47 +0530 shivuagrico
Kumbadrona male&ಕುಂಭದ್ರೋಣ ಮಳೆಯ ಅರ್ಭಟ,ಈ ಜಿಲ್ಲೆಗಳಲ್ಲಿ ಜೂನ್ 21 ರವರೆಗೆ ಭಾರಿ ಮಳೆ ಮುನ್ಸೂಚನೆ https://krushirushi.in/Kumbadrona-male-2173 https://krushirushi.in/Kumbadrona-male-2173 Kumbadrona male-ಕುಂಬದ್ರೊಣ ಮಳೆಯ ಅರ್ಬಟ,ಈ ಜಿಲ್ಲೆಗಳಲ್ಲಿ ಜೂನ್ 21 ರವರೆಗೆ ಭಾರಿ ಮಳೆ ಮುನ್ಸೂಚನೆ


ರಾಜ್ಯಾದ್ಯಂತ ಮುಂಗಾರು ಮಳೆ ಹೆಚ್ಚಾಗಿದ್ದು ಕರಾವಳಿ, ಮಲೆನಾಡು ಭಾಗಗಳಲ್ಲಿ ಗುಡುಗು, ಭಾರೀ ಬಿರುಗಾಳಿ ಇದ್ದು ಕುಂಭದ್ರೋಣ ಮಳೆಯಾಗುತ್ತಿದೆ. ಕಳೆದೊಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು ಮುಂದಿನ ಜೂನ್ 21ರವರೆಗೂ ಮಳೆ ಮುನ್ಸೂಚನೆ ನೀಡಿರುವ ಐಎಂಡಿ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. 

ಹವಾಮಾನ ಇಲಾಖೆ ಕೆಲವು ಭಾಗಗಳಲ್ಲಿ ಪ್ರವಾಹ, ಭೂಕುಸಿತದ ಎಚ್ಚರಿಕೆ ನೀಡಲಾಗಿದೆ. 

ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್: 
ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನಿಂದ ಕೂಡಿದ ಬಿರುಗಾಳಿ ಸಹಿತ ಭಾರೀ ಮಲೆಯಾಗುವ ನಿರೀಕ್ಷೆಯಿದ್ದು ಈ ಆರೂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. 

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆಯ ತೀವ್ರತೆ ಕಡಿಮೆಯಾಗುವ ಮುನ್ಸೂಚನೆ ಇದೆ. ಆದರೆ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಈಗಿನಂತೆ ಜೂನ್ 18ರಿಂದ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಜೂನ್ 19ರಿಂದ 21ರ ತನಕ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಸಣ್ಣ ಅವಕಾಶ ಸಿಗಬಹುದು (ದಿನದಲ್ಲಿ 1 ಕೆಲವು ಭಾಗಗಳಲ್ಲಿ 2 ಬ್ಯಾರೆಲ್ ಸ್ಪ್ರೇ ಮಾಡಬಹುದು). 

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ  ಕಡಿಮೆಯಾದರೂ, ಬಿಟ್ಟು ಬಿಟ್ಟು ಜೋರು ಮಳೆಯ ಮುನ್ಸೂಚನೆ ಇದೆ. ( ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಜಾಸ್ತಿ ಇರಬಹುದು). ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಹಾಗೂ ಉಳಿದ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಜೂನ್ 18ರಿಂದ ಮತ್ತಷ್ಟು ಕಡಿಮೆಯಾದರೂ ಜೂನ್ 22ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. 


ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 


ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 


ಈಗಿನಂತೆ ಜೂನ್ 18ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡ, ಬಿಸಿಲಿನ ವಾತಾವರಣದ ಲಕ್ಷಣಗಳಿವೆ.

ಅರಬ್ಬಿ ಸಮುದ್ರದ ಗುಜರಾತ್ ಕರಾವಳಿಯಲ್ಲಿ ಹಾಗೂ ಬಂಗಾಳಕೊಲ್ಲಿಯ ಬಾಂಗ್ಲಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆಯು ದುರ್ಬಲಗೊಂಡರೂ ಸಂಪೂರ್ಣ ಶಿಥಿಲಗೊಂಡಿಲ್ಲ. ಸಂಪೂರ್ಣ ಶಿಥಿಲಗೊಳ್ಳುವ ತನಕ ಮುಂಗಾರು ಚುರುಕಾಗಿರಬಹುದು.

ಈ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್: 
ಭಾರೀ ಮಳೆ ಹಿನ್ನಲೆಯಲ್ಲಿ  ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಿರುವ ಹವಾಮಾನ ಇಲಾಖೆ, ಮೈಸೂರು, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆಯಿದ್ದು ಯೆಲ್ಲೋ ಅಲರ್ಟ್ ಘೋಷಿಸಿದೆ. 

ಅರಬ್ಬೀ ಸಮುದ್ರದ ಕೊಂಕಣ ಕರಾವಳಿಯಲ್ಲಿ ಭಾರೀ ಬಿರುಗಾಳಿ ಇರುವುದರಿಂದ ಪಶ್ಚಿಮ ದಿಕ್ಕಿನಿಂದ ರಾಜ್ಯಕ್ಕೆ ಪ್ರಬಲ ಗಾಳಿ ಬೀಸುತ್ತಿರುವ ಹಿನ್ನಲೆಯಲ್ಲಿ ಜೂನ್ 17ರಿಂದ ಜೂನ್ 21ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. 



]]>
Wed, 18 Jun 2025 06:56:48 +0530 shivuagrico
PMFME scheme&ಪಿಎಂಎಫ್ಎಂಇ ಯೋಜನೆಯಡಿ 50% ಸಬ್ಸಿಡಿಯಲ್ಲಿ ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ https://krushirushi.in/PMFME-scheme-2172 https://krushirushi.in/PMFME-scheme-2172 PMFME-ಪಿಎಂಎಫ್ಎಂಇ ಯೋಜನೆಯಡಿ 50% ಸಬ್ಸಿಡಿಯಲ್ಲಿ ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ


ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್‌ಕ್ಯೂಬೇಷನ್‌ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.

ಪಿಎಂಎಫ್ಎಮ್ ಇ ಯೋಜನೆಯಡಿ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಅರ್ಜಿ ಆಹ್ವಾನ-pmfme subsidy scheme 

ಯಾವ ಯಾವ ಉದ್ಯಮ ಮಾಡಬಹುದು?
 ರೊಟ್ಟಿ ಮಾಡುವ ಯಂತ್ರ, ಎಣ್ಣೆಗಾಣ, ಬೆಲ್ಲದ ಗಾಣ, ಕಾರದಪುಡಿ ಘಟಕ, ಶಾವಿಗೆ, ಹಪ್ಪಳ-ಸಂಡಿಗೆ, ಹಿಟ್ಟಿನ ಗಿರಣಿ, ಬೇಕರಿ ಉತ್ಪನ್ನ, ಹಾಲಿನ ಉತ್ಪನ್ನ, ಉಪ್ಪಿನಕಾಯಿ ಸೇರಿದಂತೆ ಕಿರು ಆಹಾರ ಸಂಸ್ಕರಣೆ

 ಅರ್ಜಿ ಸಲ್ಲಿಸುವುದು ಹೇಗೆ?
 ಅರ್ಜಿ ಸಲ್ಲಿಸುವವರು http://mofpi.nic.in/pmfme/ ಪೋರ್ಟಲ್ ನಲ್ಲಿ ವಿವರಗಳನ್ನು ಭರ್ತಿ ಮಾಡಬೇಕು ಅಥವಾ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಮೂಲಕ ಕೂಡ ಅರ್ಜಿ ವಿವರಗಳನ್ನು ಭರ್ತಿ ಮಾಡಿಸಬಹುದು. ಜಿಲ್ಲಾ ಮಟ್ಟದಲ್ಲಿ ನೇಮಿಸಲ್ಪಟ್ಟ ಸಂಪನ್ಮೂಲ ವ್ಯಕ್ತಿಗಳು(District resource person) ಅರ್ಜಿ ಹಾಗೂ ಯೋಜನಾ ವರದಿ(Detail project report) ಪರಿಶೀಲಿಸಿ ಜಿಲ್ಲಾ ಮಟ್ಟದ ಸಮಿತಿಗೆ ಸಲ್ಲಿಸುತ್ತಾರೆ. ಸಮಿತಿ ಅಧ್ಯಕ್ಷರು ಜಂಟಿ ಕೃಷಿ ನಿರ್ದೇಶಕ ರಾಗಿದ್ದು, ಸದರಿ ಅರ್ಜಿಗಳನ್ನು ಸಮಿತಿಯಲ್ಲಿಟ್ಟು ಅರ್ಹ ಫಲಾನುಭವಿಗಳ ಆಯ್ಕೆ ಮಾಡಿಕೊಂಡು, ಬ್ಯಾಂಕ್ಗಳಿಗೆ ಸಾಲ ಮಂಜೂರಾತಿಗಾಗಿ ಕಳುಹಿಸುತ್ತಾರೆ. ಸಂಸ್ಥೆಗಳ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಸಮಿತಿಯು ನೋಡಲ ಏಜೆನ್ಸಿಗೆ ವರ್ಗಾಯಿಸುತ್ತದೆ ಹಾಗೂ ಅರ್ಜಿದಾರರಿಗೆ ಮಾಹಿತಿ ನೀಡಲು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸಹಕರಿಸುತ್ತಾರೆ. ಒಂದು ವೇಳೆ ಅರ್ಜಿಗಳು ಸಂಸ್ಥೆಗಳಿಂದ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಮಟ್ಟದ ಸಮಿತಿ ವರದಿ ಸಲ್ಲಿಸುತ್ತದೆ.ರಾಜ್ಯ ಮಟ್ಟದ ಸಮಿತಿಗೆ ಸಲ್ಲಿಸುತ್ತದೆ. 15 ಲಕ್ಷಕ್ಕೂ ಹೆಚ್ಚು ಸಹಾಯಧನ ಬೇಕಾಗಿದ್ದಲ್ಲಿ ಸದರಿ ಅರ್ಜಿಗಳನ್ನು ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ಯಮಗಳ ಮಂತ್ರಾಲಯಕ್ಕೆ ಅನುಮೋದನೆಗಾಗಿ ಕಳುಹಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್(Aadhar card)
ಪ್ಯಾನ್ ಕಾರ್ಡ್(Pan card)
ಬ್ಯಾಂಕ್ ಪಾಸಬುಕ್(Bank passbook)

PMFME-ಕಿರು ಆಹಾರ ಉದ್ಯಮ ಸ್ಥಾಪನೆಗೆ 50% ಸಬ್ಸಿಡಿ,ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ಜಿಲ್ಲೆಗಳ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ (DRP contact number) ಸಂಪರ್ಕ ಸಂಖ್ಯೆ ತಿಳಿಯಲು ಈ ಕೆಳಗಿನ pdf download ಮಾಡಿಕೊಳ್ಳಿ
]]>
Tue, 17 Jun 2025 19:47:37 +0530 shivuagrico
Ineligible pension holder&ರಾಜ್ಯದ 23 ಲಕ್ಷ ಜನರ ಪಿಂಚಣೆ ರದ್ದು https://krushirushi.in/Ineligible-pension-holder-2171 https://krushirushi.in/Ineligible-pension-holder-2171 Ineligible pension holder-ರಾಜ್ಯದ 23 ಲಕ್ಷ ಜನರ ಪಿಂಚಣೆ ರದ್ದು


ಸಾಮಾಜಿಕ ಭದ್ರತೆ ಯೋಜನೆಯಡಿ ಅಸಹಾಯಕ, ಅಶಕ್ತ, ವೃದ್ಧರು, ಅಂಗವಿಕಲರು ಮತ್ತು ವಿಧವೆಯರಿಗೆ ನೀಡುವ ಮಾಸಿಕ ಪಿಂಚಣಿ ಪಡೆಯುತ್ತಿರುವವರ ಪೈಕಿ 23.19 ಲಕ್ಷ ಅನರ್ಹರನ್ನು ಗುರುತಿಸಿರುವ ರಾಜ್ಯ ಸರ್ಕಾರ ಕೂಡಲೇ ಅವರನ್ನು ಅರ್ಹರ ಪಟ್ಟಿಯಿಂದ ಹೊರಹಾಕಿ ಬೊಕ್ಕಸ ಸೋರಿಕೆ ತಪ್ಪಿಸಲು ಮುಂದಾಗಿದೆ.

ಮುಖ್ಯಾಂಶಗಳು

21.87 ಲಕ್ಷ ವೃದ್ಧಾಪ್ಯ ಫಲಾನುಭವಿಗಳ ಪೈಕಿ 9.04 ಲಕ್ಷ ಅನರ್ಹ
31.33 ಲಕ್ಷ ಸಂಧ್ಯಾ ಸುರಕ್ಷಾ ಕಾರ್ಡ್ ಪೈಕಿ 14.15 ಲಕ್ಷ ರದ್ದು
ಕುಟುಂಬ ದತ್ತಾಂಶ ದಿಂದ ಅನರ್ಹ ಫಲಾನುಭವಿಗಳು ಪತ್ತೆ
ರಾಜ್ಯದಲ್ಲಿ 65 ವರ್ಷ ಅಥವಾ ಮೇಲ್ಪಟ್ಟ ವಯಸ್ಸಿನ ಹಿರಿಯ ಜೀವಗಳನ್ನು ಅರ್ಥಿಕ ಸಂಕಷ್ಟದಿಂದ ಪಾರು ಮಾಡುವ ದಿಶೆಯಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯಡಿ 1 ಸಾವಿರ ರೂ. ಮಾಸಾಶನ ನೀಡಲಾಗುತ್ತಿದೆ. ಇದೇ ರೀತಿಯಾಗಿ 60 ವರ್ಷ ಅಥವಾ ಮೇಲ್ಪಟ್ಟ ಹಿರಿಯರಿಗೆ ವೃದ್ಧಾಪ್ಯ ವೇತನ ಯೋಜನೆಯಡಿ 800 ರೂ. ಮಾಸಾಶನ ನೀಡಲಾಗುತ್ತಿದೆ.

ಪ್ರಸ್ತುತ ರಾಜ್ಯದಲ್ಲಿ ವೃದ್ಧಾಪ್ಯ ವೇತನ ಯೋಜನೆಯಡಿ 21.87 ಲಕ್ಷ ಹಾಗೂ ಸಂಧ್ಯಾ ಸುರಕ್ಷಾ ಯೋಜನೆಯಡಿ 31.33 ಲಕ್ಷ ಫಲಾನುಭವಿಗಳಿಗೆ ಪಿಂಚಣಿ ಪಡೆಯುತ್ತಿದ್ದಾರೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು ಇದೆ. ಆದರೆ, ಅಧಿಕೃತ ದತ್ತಾಂಶಕ್ಕಿಂತ ಅಧಿಕ ಜನರು ಮಾಸಾಶನ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯ ಸರ್ಕಾರ ಫಲಾನುಭವಿಗಳ ವಿವರಗಳನ್ನು ಕುಟುಂಬ ದತ್ತಾಂಶದ ಮಾಹಿತಿಯೊಂದಿಗೆ ಹೋಲಿಕೆ ಮಾಡಿದೆ.

ನಿಗದಿಗಿಂತ ಕಡಿಮೆ ವಯಸ್ಸಿನವರು, ಶ್ರೀಮಂತರು, ಎಪಿಎಲ್ ಕಾರ್ಡ್, ಆದಾಯ ತೆರಿಗೆ ಪಾವತಿದಾರರು, ಅರೆ-ಸರ್ಕಾರಿ ನಿವೃತ್ತ ನೌಕರರ (ಎಚ್​ಆರ್​ಎಂಎಸ್) ದತ್ತಾಂಶಗೊಂದಿಗೆ ಸಂಯೋಜನೆ ಮಾಡಿದಾಗ ದೊಡ್ಡ ಪ್ರಮಾಣದಲ್ಲಿ ಅನರ್ಹರು ಪತ್ತೆಯಾಗಿದ್ದಾರೆ. ವೃದ್ಧಾಪ್ಯ ವೇತನ ಯೋಜನೆ ಅಂದಾಜು 9.04 ಲಕ್ಷ, ಸಂಧ್ಯಾ ಸುರಕ್ಷಾ ಅಡಿ 14.15 ಲಕ್ಷ ಅನರ್ಹರು ಬೆಳಕಿಗೆ ಬಂದಿದ್ದಾರೆ.

ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಕಾರ್ಡ್​ಗಳನ್ನು ರದ್ದು ಮಾಡಲು ಕಂದಾಯ ಇಲಾಖೆ ಆದೇಶಿಸಿದೆ. ಬಡವರ ಪಿಂಚಣಿ ಹಣದಲ್ಲೂ ಉಳಿತಾಯಕ್ಕೂ ಮುಂದಾಗಿರುವ ಸರ್ಕಾರ ದಿವಾಳಿ ಅಂಚಿಗೆ ತಲುಪಿದೆ ಎಂಬುದಕ್ಕೆ ಇದಕ್ಕಿಂತ ಸಾಕ್ಷ್ಯ ಬೇಕೆ?

| ಸುನಿಲ್ ಕುಮಾರ್ ಕಾರ್ಕಳ ಶಾಸಕ

ಸರ್ಕಾರಕ್ಕೆ ಲಾಭವೇನು?

1. ಬೊಕ್ಕಸಕ್ಕೆ ದೊಡ್ಡ ಪ್ರಮಾಣದ ಉಳಿತಾಯ

2. ಅರ್ಹರಿಗೆ ಯೋಜನೆ ಲಾಭ ಸಿಗುವ ತೃಪ್ತಿ

3. ಯೋಜನೆ ದುರು ಪಯೋಗಕ್ಕೆ ಕಡಿವಾಣ

4. ನೈಜ ಹೊಸ ಫಲಾನು ಭವಿಗಳಿಗೆ ಅನುಕೂಲ

5. ಆಡಳಿತ ಯಂತ್ರದ ಮೇಲೆ ಹೊರೆ ಕಡಿಮೆ

9 ಸಾವಿರ ಕೋಟಿ ರೂಪಾಯಿ ವೆಚ್ಚ

ಸಾಮಾಜಿಕ ಭದ್ರತಾ ಯೋಜನೆಯಲ್ಲಿ ಕೇಂದ್ರದ ಪಾಲು ಅತ್ಯಲ್ಪ. ಅಂದರೆ ಒಂದು ಸಾವಿರ ಕೋಟಿ ರೂ.ಗಿಂತ ಕಡಿಮೆ ವೆಚ್ಚ ಮಾಡುತ್ತಿದೆ. ಆದರೆ ರಾಜ್ಯ ಸರ್ಕಾರ 9 ಸಾವಿರ ಕೋಟಿ ರೂ.ಗೂ ಹೆಚ್ಚು ವೆಚ್ಚ ಮಾಡುತ್ತಿದೆ. ಇದೀಗ ಅನರ್ಹರನ್ನು ಪಟ್ಟಿಯಿಂದ ಹೊರಗಿಟ್ಟರೆ ಸರ್ಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಹೊರೆ ಕಡಿಮೆಯಾಗಲಿದೆ.

ಅನರ್ಹರನ್ನು ಕಂಡು ಹಿಡಿದಿದ್ದು ಹೇಗೆ?

ಎಚ್​ಆರ್​ಎಂಎಸ್ ಮೂಲಕ ಅನರ್ಹ ಪಿಂಚಣಿದಾರರು ಪತ್ತೆ
ಆದಾಯ ತೆರಿಗೆ ಪಾವತಿಸುವವರ ಮಾಹಿತಿ ಮೂಲಕವೂ ಬೆಳಕಿಗೆ
ಆಧಾರ್ ಕಾರ್ಡ್​ನ ದತ್ತಾಂಶ ಆಧರಿಸಿ ವಯೋಮಾನದಲ್ಲಿ ಸ್ಪಷ್ಟತೆ
ಕುಟುಂಬ ತಂತ್ರಾಂಶದಲ್ಲಿನ ದತ್ತಾಂಶದ ವಿಶ್ಲೇಷಣೆಯಲ್ಲೂ ಮಾಹಿತಿ


ಅನರ್ಹ ಪಡಿತರದಾರರು 44 ಲಕ್ಷ

ರಾಜ್ಯದಲ್ಲಿ 44 ಲಕ್ಷ ಅನರ್ಹ ಪಡಿತರ ಫಲಾನುಭವಿಗಳು ಇದ್ದಾರೆ ಎಂದು ಪತ್ತೆಹಚ್ಚಿ ಕಾರ್ಡ್ ರದ್ದುಪಡಿಸಲು ರಾಜ್ಯ ಸರ್ಕಾರ ಥರ್ಡ್ ಪಾರ್ಟಿ ಸರ್ವೆಗೆ ನಿರ್ಧರಿಸಿದೆ. 2011ರ ಜನಸಂಖ್ಯೆ ದತ್ತಾಂಶದ ಪ್ರಕಾರ 4,01,93,130 ಸ್ವೀಕೃತದಾರರ ಮಿತಿ ನಿಗದಿ ಮಾಡಲಾಗಿದೆ. ಆದರೆ, 44 ಲಕ್ಷ ಹೆಚ್ಚುವರಿ ಕಾರ್ಡ್ ಇರುವುದಾಗಿ ಹೇಳುತ್ತಿದೆ.

Pension amount status check-ಪಿಂಚಣೆ ಹಣ 1200 ರಿಂದ 2000 ಕ್ಕೆ ಹೆಚ್ಚಳ

ಕೇಂದ್ರ ಸರ್ಕಾರ ಇತ್ತೀಚೆಗೆ ವಿಧವಾ ಪಿಂಚಣಿ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ, ಇದು ಲಕ್ಷಾಂತರ ಮಹಿಳೆಯರಿಗೆ ಪರಿಹಾರವನ್ನು ತರುತ್ತದೆ. ಈ ಹೆಚ್ಚಳದೊಂದಿಗೆ, ಪಿಂಚಣಿ ಮೊತ್ತವನ್ನು ಗಮನಾರ್ಹವಾಗಿ ಹೆಚ್ಚಿಸಲಾಗಿದ್ದು, ಇದರಿಂದಾಗಿ ಮಹಿಳೆಯರು ಉತ್ತಮ ಆರ್ಥಿಕ ಸಹಾಯವನ್ನು ಪಡೆಯಬಹುದು.

ವಿಧವಾ ಪಿಂಚಣಿ ಯೋಜನೆಯಡಿಯಲ್ಲಿ ಪಡೆಯುವ ಮೊತ್ತವನ್ನು ಮಹತ್ತರವಾಗಿ ಹೆಚ್ಚಿಸಲಾಗಿದೆ. ಮೊದಲು ಈ ಯೋಜನೆಯಲ್ಲಿ ತಿಂಗಳಿಗೆ 500 ರಿಂದ 1000 ರೂಪಾಯಿಗಳವರೆಗೆ ಸಿಗುತ್ತಿತ್ತು ಆದರೆ ಈಗ ಅದನ್ನು ತಿಂಗಳಿಗೆ 2000 ರಿಂದ 3000 ಕ್ಕೆ ಹೆಚ್ಚಿಸಲಾಗಿದೆ. ಇದರರ್ಥ ಮಹಿಳೆಯರು ಮೊದಲಿಗಿಂತ ಹೆಚ್ಚಿನ ಆರ್ಥಿಕ ಸಹಾಯವನ್ನು ಪಡೆಯಲು ಸಾಧ್ಯವಾಗುತ್ತದೆ, ಆದರೂ ಪ್ರತಿ ರಾಜ್ಯ ಸರ್ಕಾರವನ್ನು ಅವಲಂಬಿಸಿ ಮೊತ್ತವು ಸ್ವಲ್ಪ ಬದಲಾಗಬಹುದು. ಆದರೆ ಕೇಂದ್ರ ಸರ್ಕಾರದ ಶಿಫಾರಸಿನ ನಂತರ, ಇದನ್ನು ಅನೇಕ ರಾಜ್ಯಗಳಲ್ಲಿ ಜಾರಿಗೆ ತರಲಾಗಿದ್ದು, ಇದು ಮಹಿಳೆಯರ ಜೀವನವನ್ನು ಸ್ವಲ್ಪ ಸುಲಭಗೊಳಿಸುತ್ತದೆ.

ಪ್ರಮುಖ ಬದಲಾವಣೆಗಳು

ಪಿಂಚಣಿ ಮೊತ್ತ ₹1000 ದಿಂದ ₹2000 ಕ್ಕೆ ಏರಿಕೆ.
ಈಗ ನೀವು ಪ್ರತಿ ತಿಂಗಳು ₹2000 ರಿಂದ ₹3000 ಪಡೆಯುತ್ತೀರಿ.
ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ನಿಯಮಗಳು.

ಈ ಯೋಜನೆಯ ಲಾಭವನ್ನು ಯಾರು ಪಡೆಯಬಹುದು

ಮಹಿಳೆಯ ವಯಸ್ಸು 18 ವರ್ಷಗಳು ಆಗಿರಬೇಕು.
ಮಹಿಳೆಯ ವಾರ್ಷಿಕ ಆದಾಯವು ಸರ್ಕಾರ ನಿಗದಿಪಡಿಸಿದ ಮಿತಿಗಿಂತ ಕಡಿಮೆಯಿರಬೇಕು.
ಮಹಿಳೆಗೆ ಬೇರೆ ಯಾವುದೇ ಸರ್ಕಾರಿ ಪಿಂಚಣಿ ಯೋಜನೆಯ ಲಾಭ ಸಿಗಬಾರದು
ಮಹಿಳೆಯ ಹೆಸರಿನಲ್ಲಿ ಯಾವುದೇ ದೊಡ್ಡ ಆಸ್ತಿ ಅಥವಾ ಕೃಷಿ ಭೂಮಿ ಇರಬಾರದು.
ಈ ಷರತ್ತುಗಳನ್ನು ಪೂರೈಸುವ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬಹುದು.

ಪತಿಯ ಮರಣದ ನಂತರ ಆರ್ಥಿಕವಾಗಿ ದುರ್ಬಲರಾಗಿರುವ ಮತ್ತು ಉತ್ತಮ ಜೀವನ ನಡೆಸಲು ಸಹಾಯ ಬಯಸುವ ಮಹಿಳೆಯರಿಗಾಗಿ ಈ ಯೋಜನೆ ಇದೆ.

ಅರ್ಜಿ ಸಲ್ಲಿಸುವುದು ಹೇಗೆ?

ನೀವು ಈ ಯೋಜನೆಯ ಲಾಭ ಪಡೆಯಲು ಬಯಸಿದರೆ, ಅರ್ಜಿ ಸಲ್ಲಿಸುವುದು ತುಂಬಾ ಸುಲಭ. ನೀವು ಆನ್‌ಲೈನ್ ಮತ್ತು ಆಫ್‌ಲೈನ್ ಎರಡರಲ್ಲೂ ಅರ್ಜಿ ಸಲ್ಲಿಸಬಹುದು.

ರಾಜ್ಯಗಳಾದ್ಯಂತ ಪಿಂಚಣಿ ಮೊತ್ತ

ದೇಶದ ವಿವಿಧ ರಾಜ್ಯಗಳಲ್ಲಿ ಪಿಂಚಣಿ ಮೊತ್ತವು ಬದಲಾಗಬಹುದು. ಕೆಲವು ರಾಜ್ಯಗಳ ಪಿಂಚಣಿ ಮೊತ್ತದ ಬಗ್ಗೆ ಇಲ್ಲಿದೆ ಮಾಹಿತಿ

ರಾಜ್ಯ ಹಿಂದಿನ ಮೊತ್ತ (₹) ಹೊಸ ಮೊತ್ತ (₹)
ಉತ್ತರ ಪ್ರದೇಶ 500 1500₹
ಬಿಹಾರ 600 2000₹
ರಾಜಸ್ಥಾನ 750 2500₹
ಮಧ್ಯಪ್ರದೇಶ 1000 3000₹
ಹರಿಯಾಣ 1200 2500₹
ಮಹಾರಾಷ್ಟ್ರ 800 2000₹
ಕರ್ನಾಟಕ 900 2200₹

ಎಲ್ಲಾ ರೀತಿಯ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://dssp.karnataka.gov.in/dssp/villageWise_list_Of_beneficiaries.aspx

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಅಥವಾ ಪಟ್ಟಣ select ಮಾಡಿ, ಹೊಬಳಿ,ಗ್ರಾಮ select ಮಾಡಿ,Captch type ಮಾಡಿ, Search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿ ಪಿಂಚಣಿ ಪಡೆಯುವವರ ಹೆಸರು ಸಿಗಲಿದೆ

(ಸೂಚನೆ-Desktop mode open ಮಾಡಿಕೊಳ್ಳಿ)

Pension status-ಈ ತಿಂಗಳ ನಿಮ್ಮ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://dssp.karnataka.gov.in/dssp/Beneficiary_Status.aspx

ನಂತರ ನಿಮ್ಮ ಗ್ರಾಮದ ಪಟ್ಟಿಯಲ್ಲಿ ನಿಮ್ಮ beneficiary ID ಹಾಕಿ,captcha type ಮಾಡಿ search ಮೇಲೆ ಕ್ಲಿಕ್ ಮಾಡಿ

ನಂತರ click here to get payment details from SSP portal ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ beneficiary ID ಹಾಗೂ captcha code ಹಾಕಿ search ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಇಲ್ಲಿಯವರೆಗೆ ಜಮಾ ಆದ ಪಿಂಚಣೆ ಹಣ ಮಾಹಿತಿ ದೊರೆಯಲಿದೆ

ಹೀಗೂ ಚೆಕ್ ಮಾಡಬಹುದು

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ pension ಮೇಲೆ ಕ್ಲಿಕ್ ಮಾಡಿ

ನಂತರ ಇಲ್ಲಿಯವರೆಗೂ ಜಮಾ ಆದ ಪಿಂಚಣೆ ಹಣ(pension amount)ಮಾಹಿತಿ ಸಿಗಲಿದೆ.

]]>
Tue, 17 Jun 2025 13:59:44 +0530 shivuagrico
Pmkisan update&ಪಿಎಂ ಕಿಸಾನ್ 20ನೇ ಕಂತಿಗೆ ದಿನಗಣನೆ,ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ https://krushirushi.in/Pmkisan-update-2170 https://krushirushi.in/Pmkisan-update-2170 ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅರ್ಹ ಸಣ್ಣ ಇಡುವಳಿದಾರ ರೈತರಿಗೆ ಒಂದು ವರ್ಷಕ್ಕೆ 3000 ರೂ.ನಂತೆ ಎರಡು ಕಂತುಗಳಲ್ಲಿ ರೂ.6000 ನೀಡಲಾಗುತ್ತದೆ.

ಈ ಬಗ್ಗೆ ಕೃಷಿ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಒಂದು ವರ್ಷಕ್ಕೆ ರೂ. 6000/-ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ. ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರು ಬಾಕಿಯಿರುವ ಇ-ಕೆವೈಸಿ ಮಾಡಿಸಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದೆ.

ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನಲ್ಲಿ ನೋಂದಾಯಿಸಿರುವ ಮೊಬೈಲ್ ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸುವುದು. ಹಾಗೂ ಈಗಾಗಲೇ ಕೃಷಿ ಇಲಾಖೆಯಿಂದ ತಮ್ಮ ಗ್ರಾಮಗಳಿಗೆ ಗ್ರಾಮ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ PMKISAN e-KYC through Face Recognition App ಮೂಲಕ ಇ-ಕೆವೈಸಿ ಮಾಡಿಸುವಲ್ಲಿ ಗ್ರಾಮ ನೋಡಲ್ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ತಿಳಿಸಿರುತ್ತಾರೆ.

2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ 11 ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ. ರೈತರ ವ್ಯವಸಾಯಕ್ಕೆ ನೆರವಾಗಲು ಸರ್ಕಾರ ಈ ಸ್ಕೀಮ್ ಆರಂಭಿಸಿದೆ. ವರ್ಷಕ್ಕೆ 6,000 ರೂ ಹಣವನ್ನು ರೈತರಿಗೆ ನೀಡಲಾಗುತ್ತದೆ. ವರ್ಷಕ್ಕೆ ಮೂರು ಬಾರಿ, ಅಂದರೆ, ನಾಲ್ಕು ತಿಂಗಳಿಗೊಮ್ಮೆ ತಲಾ 2,000 ರೂ ಹಣವನ್ನು ನೇರವಾಗಿ ರೈತರ ಖಾತೆಗಳಿಗೆ ಹಣ ಹಾಕಲಾಗುತ್ತದೆ.

ಇಲ್ಲಿಯವರೆಗೆ 19 ಕಂತುಗಳನ್ನು ಸರ್ಕಾರ ನೀಡಿದೆ. ಫೆಬ್ರುವರಿ 24ರಂದು 9.8 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ 19ನೇ ಕಂತಿನ ಹಣ ಬಿಡುಗಡೆ ಮಾಡಲಾಗಿತ್ತು. ಈ 9.8 ಕೋಟಿ ರೈತರಲ್ಲಿ 2.41 ಕೋಟಿ ಮಹಿಳೆಯರೇ ಇದ್ದಾರೆ.

ಪಿಎಂ ಕಿಸಾನ್(kisan samman) ಅರ್ಹತೆಯ ಮಾನದಂಡಗಳೇನು?
ಎಲ್ಲ ಅರ್ಹ ಫಲಾನುಭವಿಗಳು ಕನಿಷ್ಠ ಪ್ರಮಾಣದ ಭೂಮಿ ಹೊಂದಿರಬೇಕು. ಇ-ಕೆವೈಸಿ ಮಾಡಿಸಿಕೊಳ್ಳಬೇಕು ಮತ್ತು ಪಿಎಂ-ಕಿಸಾನ್ ಪೋರ್ಟಲ್‌ನಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು. 
ನಿಧಿಯನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಗಾಯಿಸಲಾಗುತ್ತದೆ ಎಂದು ಅವರು ಹೇಳಿದರು.

ಇಲ್ಲಿಯವರೆಗೂ 19 ಕಂತುಗಳಲ್ಲಿ 3.68 ಲಕ್ಷ ಕೋಟಿ ಪಿಎಂ ಕಿಸಾನ್ ಹಣ ರೈತರ ಖಾತೆಗೆ


ಇದುವರೆಗೆ 3.68 ಲಕ್ಷ ಕೋಟಿ ರೂಪಾಯಿಗಳನ್ನು 19 ಕಂತುಗಳಲ್ಲಿ ದೇಶದಾದ್ಯಂತದ ರೈತರಿಗೆ ವಿತರಿಸಲಾಗಿದೆ

ನಿಮಗೇಷ್ಟು ಜಮಾ ಹೀಗೆ ಚೆಕ್ ಮಾಡಿ-Pmkisan beneficiary status 

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/

ಮೊದಲು know your status ಮೇಲೆ ಕ್ಲಿಕ್ ಮಾಡಿ

ನಂತರ know your register number ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ

ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.

ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ

ನಂತರ update your details ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ

 Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.

ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ

Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.

FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ  ಕಾರಣ ಮತ್ತು ಪರಿಹಾರ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

fruitspmk.gov.in ಪೋರ್ಟಲ್ ನಲ್ಲಿ

1

ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ

ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು                                                                     ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು

ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ  (NIC)                     ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ.            ಆ) ಸಮಸ್ಯಾತ್ಮಕ  ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ.

2

ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು

ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ

ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ    ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ

3

ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು

 ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ

ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ   ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ

4

ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ

ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ

OPERATOR ಲಾಗಿನ್ (RSK, ADA office, JDA office)  OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು

5

01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ

ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ

ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ)

6

Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು

ಜಿಲ್ಲೆಗಳಲ್ಲಿ  OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ

AAO ಲಾಗಿನ್  (RSK, ADA office, JDA office)  AAO ಲಾಗಿನ್ನಲ್ಲಿ  ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ,  ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

7

ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ

ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ)

AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.

8

PFMS rejected

Aadhaar Number is not seeded in NPCI

ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ

Bank Name And IFSC Code are not related to each other

ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ

Bank Name is not as per PFMS Bank Master.

Beneficiary is rejected as Account Type is other than SB / SBA / JD

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ)

Duplicate Beneficiary Name , Bank Account No and Bank Name not allowed for same scheme

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

IFSC Code  either not present or currently inactive in tbl BankBranch

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

Incorrect Aadhaar Number

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

One or more mandatory tags values are missing.

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

Rejected by Bank, Account No does not exist in Bank/INVALID/CLOSED

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

9

Amount credited to Account Number-NA

Aadhaar number based payment by GoI

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ.

10

PAYMENT STOPPED BY STATE

 XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳಿದ್ದರೆ ಕೇಂದ್ರ ಕಚೇರಿ ಮಾಹಿತಿ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

11

Transaction failed

ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ.

12

ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ

OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳ   ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

13

ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು

ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ.

ಕೇಂದ್ರ ಸರ್ಕಾರ ದ   pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ.

]]>
Tue, 17 Jun 2025 06:34:30 +0530 shivuagrico
Karnataka rains&ಜಿಲ್ಲಾವಾರು ಮಳೆ ಮಾಹಿತಿ,ಇನ್ನೂ ಎಷ್ಟು ದಿನ ಹೀಗೆ ಮುಂದುವರೆಯಲಿದೆ ಮಳೆ? https://krushirushi.in/Karnataka-rains-2169 https://krushirushi.in/Karnataka-rains-2169 Karnataka rains-ಜಿಲ್ಲಾವಾರು ಮಳೆ ಮಾಹಿತಿ,ಇನ್ನೂ ಎಷ್ಟು ದಿನ ಹೀಗೆ ಮುಂದುವರೆಯಲಿದೆ ಮಳೆ?

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಉತ್ತರ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಮುಂಗಾರು ಮಾರುತಗಳ ನೈಜ ಸ್ವರೂಪ ನಿನ್ನೆಯಿಂದ ಕರಾವಳಿ ಭಾಗಗಳಲ್ಲಿ ತೋರುತ್ತಿದೆ. ಜೂನ್ 14ರಿಂದ ಸ್ವಾಭಾವಿಕ ಹಾದಿಯಲ್ಲಿ ಸಾಗುತ್ತಿರುವುದೇ ಇದಕ್ಕೆ ಕಾರಣ. ಜೂನ್ 13ರ ತನಕ ವಾಯವ್ಯದಿಂದ ಆಗ್ನೇಯಕ್ಕೆ ಚಲಿಸಿರುವ ಪರಿಣಾಮದಿಂದ ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಭಾರಿ ಮಳೆಯಾಗಿತ್ತು. 
ಈಗಿನಂತೆ ಜೂನ್ 18ರಿಂದ ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಜೂನ್ 17ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಸೂಚನೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಒಳನಾಡಿನ ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 


ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. 

ಮಹಾರಾಷ್ಟ್ರದ ಮುಂಬೈ ಕಡಲ ತೀರದಲ್ಲಿ ಅಲ್ಪ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮಹಾರಾಷ್ಟ್ರ ಕರಾವಳಿಯಲ್ಲೆ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಮುಂಬೈ ಭಾರಿ ಮಳೆಯ ಸಾಧ್ಯತೆಗಳಿವೆ. 
ಇದೇ ಸಮಯದಲ್ಲಿ ಬಂಗಾಳಕೊಲ್ಲಿಯ ಬಾಂಗ್ಲಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, ಮುಂಗಾರು ಮತ್ತಷ್ಟು ಬಲಗೊಳ್ಳುಲು ಕಾರಣವಾಗಿದೆ. 
ಈ ಎರಡೂ ತಿರುಗುವಿಕೆಯು ದುರ್ಬಲಗೊಂಡಂತಯೇ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

]]>
Mon, 16 Jun 2025 19:20:49 +0530 shivuagrico
FID&ಸರ್ಕಾರದ ಸಬ್ಸಿಡಿ ಸವಲತ್ತು,ಬೆಳೆಸಾಲ ಹಾಗೂ ಬೆಳೆವಿಮೆಗೆ ಎಫ್ ಐಡಿ ಕಡ್ಡಾಯ,ಆಧಾರ್ ನಂಬರ್ ಹಾಕಿ ನಿಮ್ಮ FID  ತಿಳಿದುಕೊಳ್ಳಿ https://krushirushi.in/FID-2168 https://krushirushi.in/FID-2168 FID-ಸರ್ಕಾರದ ಸಬ್ಸಿಡಿ ಸವಲತ್ತು,ಬೆಳೆಸಾಲ ಹಾಗೂ ಬೆಳೆವಿಮೆಗೆ ಎಫ್ ಐಡಿ ಕಡ್ಡಾಯ,ಆಧಾರ್ ನಂಬರ್ ಹಾಕಿ ನಿಮ್ಮ FID  ತಿಳಿದುಕೊಳ್ಳಿ

ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.

 ಏನಿದು ಫ್ರೂಟ್ಸ್ ನಂಬರ್


 ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.



ನಿಮ್ಮ FID ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx 

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.

FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

 ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್‍ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.

 ಏಕೆ ನೋಂದಾಯಿಸಬೇಕು?


 ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್  ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ


ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.

ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು

]]>
Mon, 16 Jun 2025 08:04:45 +0530 shivuagrico
ಉಚಿತ ಆಧಾರ್ ಅಪ್ಡೇಟ್ ಗೆ ಕೊನೆಯ ದಿನಾಂಕ ವಿಸ್ತರಣೆ,ಇಲ್ಲದಿದ್ದರೆ ದಂಡ ಫಿಕ್ಸ್,ಹೀಗೆ ಮಾಡಿ ನಿಮ್ಮ ಆಧಾರ್ ಅಪ್ಡೇಟ್&Free Aadhar update last date extended  https://krushirushi.in/Free-Aadhar-update-last-date-extended-2167 https://krushirushi.in/Free-Aadhar-update-last-date-extended-2167 ಉಚಿತ ಆಧಾರ್ ಅಪ್ಡೇಟ್ ಗೆ ಕೊನೆಯ ದಿನಾಂಕ ವಿಸ್ತರಣೆ,ಇಲ್ಲದಿದ್ದರೆ ದಂಡ ಫಿಕ್ಸ್,ಹೀಗೆ ಮಾಡಿ ನಿಮ್ಮ ಆಧಾರ್ ಅಪ್ಡೇಟ್-Free Aadhar update last date extended 

ಈ ಮೊದಲು ಆಧಾರ್​ಗೆ ಸಂಬಂಧಿತ ಮಾಹಿತಿ ಅಪ್​ಲೋಡ್​ ಮಾಡಿಕೊಳ್ಳಲು ಈ ಮೊದಲು ಜೂನ್ 14 2025 ಕೊನೆಯ ದಿನವಾಗಿತ್ತು, ಈಗ ಜೂನ್ 14,2026 ರವರೆಗೆ ಅವಧಿ ವಿಸ್ತರಿಸಲಾಗಿದ್ದು,ಆನ್​ಲೈನ್​ನಲ್ಲಿ ಉಚಿತವಾಗಿ ಆಧಾರ್​ ಅಪ್​ಡೇಟ್​ ಮಾಡಿಕೊಳ್ಳಿ

ನೀವು ಆಧಾರ್​ ಸಂಖ್ಯೆ ಪಡೆದು ಹತ್ತು ವರ್ಷಗಳಾಗಿದ್ದಲ್ಲಿ ಹಾಗೂ ಇದುವರೆಗೂ ಯಾವುದೇ ಮಾಹಿತಿ ಅಪ್​ಡೇಟ್ ಮಾಡಿಕೊಂಡಿರದಿದ್ದಲ್ಲಿ ಈ ಅವಕಾಶವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಅಂದಹಾಗೆ ಇದು ಡೆಮೊಗ್ರಫಿಕ್​ ಡೇಟಾಗಷ್ಟೇ ಸೀಮಿತವಾಗಿರಲಿದೆ ಎಂದು ಯುಐಡಿಎಐ ತಿಳಿಸಿದೆ.

ಈ ಅಪ್​ಡೇಟ್​ಗೆ ಆಧಾರ್​ ಗ್ರಾಹಕ ಸೇವಾ ಕೇಂದ್ರದಲ್ಲಿ 50 ರೂ. ಶುಲ್ಕ ವಿಧಿಸಲಾಗುತ್ತಿದೆ. ಆದರೆ ಆನ್​ಲೈನ್​ನಲ್ಲಿ ಉಚಿತವಾಗಿ ಮಾಡಿಕೊಳ್ಳಲು ಅವಕಾಶವಿದ್ದು,ಹತ್ತು ವರ್ಷಗಳ ಹಿಂದೆ ಆಧಾರ್​ ಪಡೆದವರು ತಮ್ಮ ಇತ್ತೀಚಿಗಿನ ಗುರುತು, ವಾಸದ ವಿಳಾಸ ಇತ್ಯಾದಿ ಮಾಹಿತಿಗಳನ್ನು ಜೂನ್ 14ರ ಒಳಗೆ ಉಚಿತವಾಗಿ ಅಪ್​​ಡೇಟ್ ಮಾಡಿಕೊಳ್ಳಬಹುದು.

ಅಲ್ಲದೆ ಡೆಮೊಗ್ರಫಿಕ್ ಡೇಟಾ ಅಂದರೆ, ಹೆಸರು, ವಿಳಾಸ, ಜನ್ಮದಿನಾಂಕ, ಲಿಂಗ, ಮೊಬೈಲ್​ಫೋನ್​ ನಂಬರ್, ಇ-ಮೇಲ್ ಐಡಿ ವಿವರಗಳನ್ನು ಅಪ್​ಡೇಟ್ ಮಾಡಿಕೊಳ್ಳಬಹುದು.

Free Aadhaar update-ಉಚಿತವಾಗಿ ಆಧಾರ್ ಅಪ್ಡೇಟ್ ಮಾಡುವ ಡೈರೆಕ್ಟ್ ಲಿಂಕ್

https://myaadhaar.uidai.gov.in/

ಮೊದಲು ಮುಖಪುಟದಲ್ಲಿರುವ login ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,Captcha type ಮಾಡಿ, send OTP ಮೇಲೆ ಕ್ಲಿಕ್ ಮಾಡಿ

ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Login ಮೇಲೆ ಕ್ಲಿಕ್ ಮಾಡಿ

ನಂತರ Document update ಮೇಲೆ ಕ್ಲಿಕ್ ಮಾಡಿ

ನಂತರ Next ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ Next ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ Next ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ POI ಅಂದರೆ ನಿಮ್ಮ ಗುರುತಿನ ಚೀಟಿಯಾಗಿ ಪ್ಯಾನ್ ಕಾರ್ಡ್ ಅಥವಾ ಯಾವುದಾದರು ಗುರುತಿನ ಚೀಟಿಯನ್ನು ಹಾಗೂ POA ಅಂದರೆ ನಿಮ್ಮ ವಿಳಾಸದ ಪುರಾವೆಯನ್ನು select ಮಾಡಿ ನಿಮ್ಮ passport ಅಥವಾ ಯಾವುದಾದರೂ ವಿಳಾಸದ ಪುರಾವೆಯ ಫೋಟೊವನ್ನು ಅಪ್ಲೋಡ್ ಮಾಡಿ,Next ಮೇಲೆ ಕ್ಲಿಕ್ ಮಾಡಿ

ಸೂಚನೆ:ನೀವು ಅಪ್ಲೋಡ್ ಮಾಡುವ ಫೋಟೊ 2MB ಗಿಂತ ಮೇಲೆ ಇರಬೇಕು.

ನಂತರ Okay ಮೇಲೆ ಕ್ಲಿಕ್ ಮಾಡಿ

ನಂತರ submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ಅಪ್ಡೇಟ್ ಆಗಿ,Success ಎಂದು ತೋರಿಸುತ್ತದೆ.

ನಂತರ Download acknowledgment ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮಗೆ Acknowledgment ದೊರೆಯುತ್ತದೆ

]]>
Sun, 15 Jun 2025 16:24:06 +0530 shivuagrico
ಉಚಿತ ಹಾಲು ಕರೆಯುವ ಯಂತ್ರ,ರಬ್ಬರ್ ಮ್ಯಾಟ್,ಸೈಲೆಜ್ ಬ್ಯಾಗ್ ವಿತರಣೆಗೆ ಅರ್ಜಿ ಆಹ್ವಾನ&Vetarnary department subsidy schemes  https://krushirushi.in/Vetarnary-department-subsidy-schemes-2166 https://krushirushi.in/Vetarnary-department-subsidy-schemes-2166 ಉಚಿತ ಹಾಲು ಕರೆಯುವ ಯಂತ್ರ,ರಬ್ಬರ್ ಮ್ಯಾಟ್,ಸೈಲೆಜ್ ಬ್ಯಾಗ್ ವಿತರಣೆಗೆ ಅರ್ಜಿ ಆಹ್ವಾನ-Vetarnary department subsidy schemes 


2024-25 ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿಯಲ್ಲಿ ಹಾಲು ಕರೆಯುವ ಯಂತ್ರ(Milking machine), ರಬ್ಬರ್ ನೆಲಹಾಸು(Rubber mat) ಹಾಗೂ ಸೈಲೇಜ್ ಬ್ಯಾಗ್ಗಳನ್ನು(Silage bag) ವಿತರಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ(Vetarnary department)ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಾಲು ಕರೆಯುವ ಯಂತ್ರ  ತಲಾ 1 ರಂತೆ, ರಬ್ಬರ್ ನೆಲಹಾಸು ತಲಾ 2 ರಂತೆ ಹಾಗೂ ಸೈಲೇಜ್ ಬ್ಯಾಗ್ ತಲಾ 100 ಕೆಜಿ ಸಾಮರ್ಥ್ಯದ 1 ಹಾಗೂ 500 ಕೆಜಿ ಸಾಮರ್ಥ್ಯದ 1 ಬ್ಯಾಗ್ ಅನ್ನು ನೀಡಲಾಗುತ್ತದೆ. ಸದರಿ ಫಲಾನುಭವಿಗಳ ಆಯ್ಕೆಯಲ್ಲಿ ರೋಸ್ಟರ್ ನಿಯಾಮಾನುಸಾರದ ಕ್ರಮ ವಹಿಸಲಿದ್ದು, ಆಸಕ್ತರು ತಮ್ಮ ಸ್ಥಳೀಯ ಪಶುವೈದ್ಯಾಧಿಕಾರಿಗಳಿಂದ/ಮುಖ್ಯ ಪಶುವೈದ್ಯಾಧಿಕಾರಿಗಳು ಇವರಿಂದ ಅರ್ಜಿ ನಮೂನೆಯನ್ನು ಪಡೆದು ಎಲ್ಲಾ ದಾಖಲಾತಿಗಳೊಂದಿಗೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮುಖ್ಯ ಪಶು ವೈದ್ಯಾಧಿಕಾರಿಗಳ ಈ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming 

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು(Cow) ಅಥವಾ ಎಮ್ಮೆ(Buffelow) ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್‌ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.


ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Vetarnary department schemes 2025-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?

ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ


ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.

ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.


ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು

ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.


ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.


ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.

ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.


ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.

ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.


ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahvs.karnataka.gov.in/info-2/Schemes+&+Benefits/kn

National livestock mission 2024-ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆ,ಕುರಿ,ಕೋಳಿ,ಮೇಕೆ,ಹಂದಿ ಸಾಕಾಣೆಕೆಗೆ ಅರ್ಜಿ ಆಹ್ವಾನ

ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ, ಮೇಕೆ, ಹಂದಿ ಸಾಕಾಣಿಕೆ ಮತ್ತು ರಸಮೇವು ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.

National livestock mission 


ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ

(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)


 ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.


 ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.

ಅವಶ್ಯಕ ದಾಖಲಾತಿಗಳು :-

1)ಆಧಾರ,

2)ಪಹಣಿ ಪತ್ರ

3)ಬ್ಯಾಂಕ್‌ಖಾತೆ ಸಂಖ್ಯೆ,

ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು

4)ಭಾವ ಚಿತ್ರ.



ಕ್ರ.ಸಂ 

ಘಟಕ 

ಸೌಲಭ್ಯಗಳ ವಿವರ

 

 ಹೈನುಗಾರಿಕೆ 

 

1

ಮಿಶ್ರತಳಿ ದನಗಳ ನಿರ್ವಹಣೆ (1+1)

ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ

 

ಆ. ಸುಧಾರಿತ ಎಮ್ಮೆಗಳ ನಿರ್ವಹಣೆ 
 (1+1)

ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ

 

 ಕುರಿ ಸಾಕಾಣಿಕೆ 

 

2

ಕುರಿಗಳ ನಿರ್ವಹಣೆ (10+01)

 ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ

 

ಕುರಿಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ

 

ಟಗರುಗಳ ನಿರ್ವಹಣೆ (10)

ರೂ. 13,000 ರಂತೆ ಸಾಲ ಸೌಲಭ್ಯ

 

 ಟಗರುಗಳ ನಿರ್ವಹಣೆ (20)

ರೂ. 26,000 ರಂತೆ ಸಾಲ ಸೌಲಭ್ಯ

 

ಮೇಕೆ ಸಾಕಾಣಿಕೆ 

 

3

ಮೇಕೆಗಳ ನಿರ್ವಹಣೆ (10+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ

 

ಮೇಕೆಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ

4

ಹಂದಿ ಸಾಕಾಣಿಕೆ (10)

ರೂ,60,000 ರಂತೆ ಸಾಲ ಸೌಲಭ್ಯ

 

           ಕೋಳಿ ಸಾಕಾಣಿಕೆ 

 

5

ಮಾಂಸದ ಕೋಳಿ ಸಾಕಾಣಿಕೆ

2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ

 

 ಮೊಟ್ಟೆ ಕೋಳಿ ಸಾಕಾಣಿಕೆ

1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.

ಈ ಮಾಹಿತಿ ನಿಮಗೆ ಉಪಯೋಗವಾಗಿದ್ದರೆ ಬೇರೆಯವರಿಗೂ ಹಂಚಿಕೊಳ್ಳಿ ಧನ್ಯವಾದಗಳು

]]>
Sun, 15 Jun 2025 09:35:28 +0530 shivuagrico
Heavy rain alert&9 ಜಿಲ್ಲೆಗಳಿಗೆ ರೆಡ್ ಅಲರ್ಟ್,5 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ https://krushirushi.in/Heavy-rain-alert-2165 https://krushirushi.in/Heavy-rain-alert-2165 Heavy rain alert-9 ಜಿಲ್ಲೆಗಳಿಗೆ ರೆಡ್ ಅಲರ್ಟ್,5 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ


ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ 9 ಜಿಲ್ಲೆಗಳಿಗೆ ರೆಡ್ ಅಲರ್ಟ್ಘೋಷಿಸಲಾಗಿದ್ದು, ಐದು ಜಿಲ್ಲೆಗಳಲ್ಲಿ ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಸೈಕ್ಲೋನ್‌ಗೆ ಕಾರಣವಾಗಿದ್ದು, ಸಮುದ್ರದಲ್ಲಿ 5.8 ರಿಂದ 8 ಅಡಿ ಎತ್ತರದ ಸುಳಿಗಾಳಿ ಬೀಸುತ್ತಿದೆ. ಈ ಸೈಕ್ಲೋನ್ ಪರಿಣಾಮದಿಂದ ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಕಾರಣದಿಂದಾಗಿ ರಾಜ್ಯದ 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ

ಉಡುಪಿ

ದಕ್ಷಿಣ ಕನ್ನಡ

ಶಿವಮೊಗ್ಗ

ಚಿಕ್ಕಮಗಳೂರು

ಕೊಡಗು

ಹಾಸನ

ಮೈಸೂರು

ಚಾಮರಾಜನಗರ

ಭಾರೀ ಮಳೆಯ ಹಿನ್ನೆಲೆಯಲ್ಲಿ ಐದು ಜಿಲ್ಲೆಗಳಾದ ಧಾರವಾಡ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ಮತ್ತು ಕೊಡಗು ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ, ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ರಾಜ್ಯದ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ:

ಬಾಗಲಕೋಟೆ

ಗದಗ

ವಿಜಯಪುರ

ದಾವಣಗೆರೆ

ಹಾಸನ

ಮೈಸೂರು

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಇತರ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂಗಾರು ಮಳೆ ಜೋರಾಗಿ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ರಸ್ತೆ ಸಂಚಾರದಲ್ಲಿ ಜನರು ತೊಂದರೆ ಎದುರಿಸುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವು ಸೈಕ್ಲೋನ್ ರೂಪ ತಾಳಿದ್ದು, ದಿನದಿಂದ ದಿನಕ್ಕೆ ಇದರ ತೀವ್ರತೆ ಹೆಚ್ಚುತ್ತಿದೆ. ಆಂಧ್ರ ಪ್ರದೇಶದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮ ಕರ್ನಾಟಕದ ಕರಾವಳಿ ಭಾಗಗಳ ಮೇಲೂ ಬೀಳಲಿದೆ.

ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಜಾಗರೂಕರಾಗಿರಿ.

ಅಗತ್ಯವಿದ್ದರೆ ತುರ್ತು ಸಂಖ್ಯೆಗಳಾದ 1077 ಗೆ ಸಂಪರ್ಕಿಸಿ.

ಸಮುದ್ರ ತೀರಕ್ಕೆ ಭೇಟಿ ನೀಡದಿರಿ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹೆಚ್ಚಿರುವ ಮುನ್ಸೂಚನೆ ಇದೆ.
ಈಗಿನಂತೆ ಮುಂಗಾರು ಮೋಡಗಳ ಚಲನೆಯು ಸಾಂಪ್ರದಾಯಿಕ ಹಾದಿಗೆ ಮರಳುತ್ತಿದ್ದರೂ, ಮುನ್ಸೂಚನೆಯಲ್ಲಿರುವಷ್ಟು ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಜೂನ್ 18ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ. 

ಮಲೆನಾಡು : ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದೆ. ಒಂದೆರಡು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆಯೂ ಇದೆ. ಹಾಸನ ಸಾಮಾನ್ಯ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಜೂನ್ 15ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಜಾಸ್ತಿ ಇರಬಹುದು. ಜೂನ್ 18ರಿಂದ ತುಂತುರು ಮಳೆಯ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಉತ್ತಮ ಹಾಗೂ ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. 
ಈಗಿನಂತೆ ಜೂನ್ 15ರಿಂದ ಮಳೆಯ ಪ್ರಮಾಣ ಕಡಿಮೆಯಾಗಿ ಜೂನ್ 19ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.

]]>
Sat, 14 Jun 2025 19:57:07 +0530 shivuagrico
Free motor rebinding training&ಉಚಿತ ಊಟ ವಸತಿಯೊಂದಿಗೆ ಮೋಟಾರ್ ರಿವೈಂಡಿಂಗ್ ತರಬೇತಿ https://krushirushi.in/Free-motor-rebinding-training-2159 https://krushirushi.in/Free-motor-rebinding-training-2159 Free motor rebinding training-ಉಚಿತ ಊಟ ವಸತಿಯೊಂದಿಗೆ ಮೋಟಾರ್ ರಿವೈಂಡಿಂಗ್ ತರಬೇತಿ

ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ 19 ರಿಂದ 45 ವಯಸ್ಸಿನ ಯುವಕ ಮತ್ತು ಯುವತಿಯರಿಗೆ 
ಮೂವತ್ತು ದಿನಗಳ ಕಾಲ ಮೋಟಾರ್ ರಿವೈಂಡಿಂಗ್ ಮತ್ತು ಎಲೆಕ್ಟ್ರಿಕಲ್ ಉಪಕರಣಗಳ ರಿಪೇರಿ ತರಬೇತಿಯನ್ನು ದಿನಾಂಕ 5/7/2025 ರಿಂದ 3/8/2025 ವರೆಗೆ ಹಮ್ಮಿಕೊಳ್ಳಲಾಗಿದೆ.
ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ 

 ಆಸಕ್ತರು ಕೂಡಲೇ ಕೆಳಗಡೆ ನಮೂದಿಸಿದ ಮೊಬೈಲ್ ನಂಬರ್ ಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಿ 
8660219375


Free mobile repair training-ಉಚಿತ ಊಟ ವಸತಿಯೊಂದಿಗೆ 1 ತಿಂಗಳ ಮೊಬೈಲ್ ರಿಪೇರಿ ತರಭೇತಿ

ಹಾವೇರಿ ಜಿಲ್ಲೆಯವರಿಗೆ ಮಾತ್ರ

ಉಚಿತ ಉಚಿತ ಉಚಿತ
*ಬ್ಯಾಂಕ್ ಆಫ್ ಬರೋಡ  ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ *"    ಮೊಬೈಲ್ ರೀಪೆರ್* "ತರಬೇತಿ ಯನ್ನು *ಜುಲೈ ತಿಂಗಳಲ್ಲಿ* ಹಮ್ಮಿಕೊಳ್ಳಲಾಗಿದೆ

 *ತರಬೇತಿಯಲ್ಲಿ* 
1)ಕೀ ಪ್ಯಾಡ್  ಐಂಡ್ರಾಯಿಡ್ ಮೊಬೈಲ್ ರೀಪೆರ 
2)  ಫವರ್, ವೊಲ್ಟೇಜ್,ಚಾರ್ಜಿಂಗ್,ಕ್ಯಾಮರ್,ಬ್ಯಾಟರಿ,ಡಿಸ್ಪ್ಲೆ,ಹ್ಯಾಂಗಿಂಗ್ ಪ್ರಾಬ್ಲಮ್ ಸೋಲುಶನ್
3)ರೀಸೆಟ್,ಸಾಪ್ಟವೇರ್ಸ,GPRS,wifi,GSM,MMC ಇತ್ಯಾದಿಗಳನ್ನು ಉಚಿತವಾಗಿ ಕಲಿಸುತ್ತೇವೆ

ತಮ್ಮ ಹೆಸರನ್ನು ಫೋನ್ ಮೂಲಕ ನೋಂದಾಯಿಸಿಕೊಳ್ಳಲು *8660219375* ನಂಬರ್ ಗೆ ಕಾಲ್ ಮಾಡಿ.

Free CCTV Installation and repair training-ಉಚಿತ ಊಟ ವಸತಿಯೊಂದಿಗೆ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿ

ಇದೇ ರೀತಿ ಬೇರೆ ಜಿಲ್ಲೆಗಳಲ್ಲೂ ಲೀಡ್ ಬ್ಯಾಂಕ್ ವತಿಯಿಂದ ತರಭೇತಿಗಳು ನಡೆಯುತ್ತವೆ,ಹೆಚ್ಚಿನ ಮಾಹಿತಿಗಾಗಿ ನಿಮ್ಮ ಜಿಲ್ಲೆಯ ಲೀಡ್ ಬ್ಯಾಂಕ್ ಸಂಪರ್ಕಿಸಿ


Free tailoring training-ಉಚಿತ ಊಟ ವಸತಿಯೊಂದಿಗೆ ಹೊಲಿಗೆ ಯಂತ್ರ ತರಭೇತಿ


ಉಚಿತ ಉಚಿತ ಉಚಿತ
*ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ ಮಹಿಳೆಯರ ಉಚಿತ ಹೊಲಿಗೆ ತರಬೇತಿಯನ್ನು ದಿನಾಂಕ 2.6.2025 ರಿಂದ 2.7.2025  ರ ವರೆಗೆ 31 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ* 

ಹಾವೇರಿ ಜಿಲ್ಲೆಯ  ಗ್ರಾಮೀಣ ಭಾಗದ BPL ರೇಷನ್ ಕಾರ್ಡ ಹೊಂದಿದ 18-45 ವಯಸ್ಸಿನ ನಿರುದ್ಯೋಗಿ ಯುವತಿಯರಿಗೆ ಅವಕಾಶವಿದೆ.
 *ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ.*
ತರಬೇತಿಯಲ್ಲಿ ಕಲಿಸುವ ವಿಷಯಗಳು 
ಕಟೋರಿ ಬ್ಲೌಸ್
ಪ್ರಿನ್ಸೆಸ್ ಕಟ್ ಬ್ಲೌಸ್ 
ಬೋಟ್ ನೆಕ್ ಬ್ಲೌಸ್ 
ಸಾದಾ ಬ್ಲೌಸ್
ಹೈ ನೆಕ್ ಬ್ಲೌಸ್
V ನೆಕ್ ಬ್ಲೌಸ್ 
ಫುಲ್ ಸ್ಲೀವ್ ಬ್ಲೌಸ್ ಹೊಲಿಯುವುದು 
ಚೂಡಿದಾರ್ ಹೊಲಿಯುವುದು 
ಸಣ್ಣ ಮಕ್ಕಳ ಬಟ್ಟೆ ಹೊಲಿಯುವುದು 
ಯೂನಿಫಾರ್ಮ್
ಲಾಂಗ್ ಗೌನ್ ಹೊಲಿಯುವುದು
ಕ್ರಾಪ್ ಟಾಪ್ ಹೊಲಿಯುವುದು
ನೈಟ್ ಡ್ರೆಸ್ ಹೊಲಿಯುವುದು
ಮುಂತಾದವುಗಳನ್ನು ಉಚಿತವಾಗಿ ಕಲಿಸುತ್ತೇವೆ..

ತಮ್ಮ ಹೆಸರನ್ನು ಫೋನ್ ಮೂಲಕ ನೋಂದಾಯಿಸಿಕೊಳ್ಳಲು *8660219375* ನಂಬರ್ ಗೆ ಕಾಲ್ ಮಾಡಿ.

]]>
Sat, 14 Jun 2025 13:29:09 +0530 shivuagrico
ಆಧಾರ್ ಲಿಂಕ್ ಆದ ರೈತರಿಗೆ ಬೆಳೆ ವಿಮೆ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿ&Aadhaar not linked bele vime farmers list https://krushirushi.in/Aadhar-not-linked-bele-vime-farmers-list-2164 https://krushirushi.in/Aadhar-not-linked-bele-vime-farmers-list-2164 ಆಧಾರ್ ಲಿಂಕ್ ಆದ ರೈತರಿಗೆ ಬೆಳೆ ವಿಮೆ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿ-Aadhaar not linked bele vime farmers list

ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/AadharNotSeededReport.aspx

ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ

]]>
Sat, 14 Jun 2025 08:53:02 +0530 shivuagrico
Crop insurance details on survey number&ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆವಿಮೆ ಸಿಗಲಿದೆ? ಸರ್ವೆ ನಂಬರ್ ಹಾಕಿ ಬೆಳೆವಿಮೆ ಚೆಕ್ ಮಾಡಿ https://krushirushi.in/Crop-insurance-details-on-survey-number-2162 https://krushirushi.in/Crop-insurance-details-on-survey-number-2162 Crop insurance details on survey number-ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆವಿಮೆ ಸಿಗಲಿದೆ? ಸರ್ವೆ ನಂಬರ್ ಹಾಕಿ ಬೆಳೆವಿಮೆ ಚೆಕ್ ಮಾಡಿ

1.ನಿಮ್ಮ ಸರ್ವೇ ನಂಬರ್ ಗೆ ಎಷ್ಟು ಬೆಳೆವಿಮೆ ಕಟ್ಟಬೇಕು? ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://www.samrakshane.karnataka.gov.in/

ನಂತರ ವರ್ಷದ ಆಯ್ಕೆ *2023-24* ಮತ್ತು ಋುತು *kharif* ಎಂದು select ಮಾಡಿ, *ಮುಂದೆ/Go* ಮೇಲೆ click ಮಾಡಿ



Farmer ಕಾಲಂನಲ್ಲಿ *Crop insurance details on survey number* ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮ select ಮಾಡಿ, Survey number type ಮಾಡಿ *Search* ಮೇಲೆ ಕ್ಲಿಕ್ ಮಾಡಿ

ನಿಮ್ಮ ಸರ್ವೆ ನಂಬರ್ ನಲ್ಲಿ ಬರುವ ಎಲ್ಲಾ ಹಿಸ್ಸಾ ನಂಬರ್ ಮಾಹಿತಿ ದೊರೆಯುತ್ತದೆ.

ನಂತರ ನಿಮ್ಮ ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿದರೆ,ನೀವು ಬೆಳೆವಿಮೆ ಕಟ್ಟಿರುವ ಕುರಿತು ಖಚಿತಪಡಿಸಿಕೊಳ್ಳಬಹುದು.

Belevime Premium calculator-ಈ ವರ್ಷ ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಿದರೆ ಎಷ್ಟು ಬೆಳೆವಿಮೆ ಬರಲಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Premium calculator" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,ಬೆಳೆ,ಎಕರೆ,ಗುಂಟೆ selet ಮಾಡಿ Show premium ಮೇಲೆ ಕ್ಲಿಕ್ ಮಾಡಿ


ಈ ಕೆಳಗಿನಂತೆ ಯಾವ ಬೆಳೆಗೆ ಎಷ್ಟು ಬೆಳೆವಿಮೆ(crop insurance) ಸಿಗಲಿದೆ ಎಂಬ ಮಾಹಿತಿ ದೊರೆಯಲಿದೆ.

]]>
Thu, 12 Jun 2025 19:05:13 +0530 shivuagrico
Crop you can insure&ಮುಂಗಾರಿನ ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಬೇಕು? ಚೆಕ್ ಮಾಡಿಕೊಂಡು ಬೆಳೆವಿಮೆ ಕಟ್ಟಿ https://krushirushi.in/Crop-you-can-insure-2163 https://krushirushi.in/Crop-you-can-insure-2163 Crop you can insure-ಮುಂಗಾರಿನ ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಬೇಕು? ಚೆಕ್ ಮಾಡಿಕೊಂಡು ಬೆಳೆವಿಮೆ ಕಟ್ಟಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ


Farmer ಕಾಲಂನಲ್ಲಿ "
Crop you can insure" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ selet ಮಾಡಿ Display ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಯಾವ ಬೆಳೆಗೆ ಎಷ್ಟು ಬೆಳೆವಿಮೆ(crop insurance) ಸಿಗಲಿದೆ ಎಂಬ ಮಾಹಿತಿ ದೊರೆಯಲಿದೆ.

ವಿಡಿಯೊ ನೋಡಿ

https://youtu.be/KIjiKXTDp2E?si=gfKzJeykEkROrM_m 

40° ಟೆಂಪರೇಚರ್ ನಲ್ಲಿ ಪೈನಾಪಲ್/ಅನಾನಸ್ ಬೆಳೆದು ಎಕರೆಗೆ 6 ಲಕ್ಷ ಆದಾಯ ಗಳಿಸಿದ ರೈತ



Belevime last date 2024-ಮುಂಗಾರು ಬೆಳೆವಿಮೆ ನೊಂದಣೆ ಪ್ರಾರಂಭ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ

ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ

]]>
Thu, 12 Jun 2025 06:08:11 +0530 shivuagrico
ಬೆಳೆವಿಮೆ ನೊಂದಣೆ ಪ್ರಾರಂಭ,ಎಷ್ಟು ಬೆಳೆವಿಮೆ ಕಟ್ಟಿದರೆ,ಎಷ್ಟು ಬೆಳೆವಿಮೆ ಸಿಗುತ್ತೆ ಹೀಗೆ ಲೆಕ್ಕ ಹಾಕಿ&Crop insurance premium calculator https://krushirushi.in/Crop-insurance-premium-calculator-2161 https://krushirushi.in/Crop-insurance-premium-calculator-2161 ಬೆಳೆವಿಮೆ ನೊಂದಣೆ ಪ್ರಾರಂಭ,ಎಷ್ಟು ಬೆಳೆವಿಮೆ ಕಟ್ಟಿದರೆ,ಎಷ್ಟು ಬೆಳೆವಿಮೆ ಸಿಗುತ್ತೆ ಹೀಗೆ ಚೆಕ್ ಮಾಡಿ-Crop insurance premium calculator

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ 
ಬಿಮಾ(ವಿಮಾ) ಯೋಜನೆಯಡಿ 2025-26ನೇ ಸಾಲಿನ ಬೆಳೆ ವಿಮೆಗೆ ನೋಂದಣಿ ಶುರುವಾಗಿದೆ. ಪ್ರಕೃತಿ ವಿಕೋಪ ಹಾಗೂ ಕೀಟರೋಗ ಬಾಧೆಯಿಂದ ಬೆಳೆನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಭದ್ರತೆ ಕಲ್ಪಿಸಲಾಗುತ್ತದೆ


ಬೆಳೆಸಾಲ ಪಡೆದ ಹಾಗೂ ಬೆಳೆಸಾಲ ಪಡೆಯದ ರೈತರು ಬೆಳೆ ವಿಮೆಯಡಿ ಒಳಪಡುವುದು ಐಚ್ಛಿಕವಾಗಿರುತ್ತದೆ. ಬೆಳೆಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛೆ ಪಡದೇ ಇದ್ದಲ್ಲಿ, ಈ ಕುರಿತು ಬ್ಯಾಂಕ್ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು. 


ಅಭಿಸೂಚಿಸಲಾದ ಬೆಳೆಗಳಿಗೆ ರೈತರು ತಮ್ಮ ಜಮೀನಿನ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಮತ್ತು ಆಧಾ‌ರ್ ಪ್ರತಿಗಳೊಂದಿಗೆ ಸಮೀಪದ ಬ್ಯಾಂಕ್ ಅಥವಾ ನಾಗರಿಕ ಸೇವಾ ಕೇಂದ್ರಗಳು ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ವಿಮಾ ಪರಿಹಾರ: 
ಮಳೆ ಅಭಾವದಿಂದ ವಿಮಾ ಘಟಕದಲ್ಲಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ದೀರ್ಘಕಾಲದ ತೇವಾಂಶ ಕೊರತೆ, ತೀವ್ರ ಬರಗಾಲ, ಮುಳುಗಡೆ ಮುಂತಾದವುಗಳಿಂದ ಯಾವುದೇ ಅಧಿಸೂಚಿತ ವಿಮಾ ಘಟಕದಲ್ಲಿ ಬಿತ್ತನೆಯಾದ ನಂತರ ಕಟಾವಿಗೆ 15 ದಿನಗಳಿಗಿಂತ ಮೊದಲು ಬೆಳೆ ಹಾನಿಯಾಗಿದ್ದಲ್ಲಿ ಪರಿಹಾರ ಪಡೆದುಕೊಳ್ಳಬಹುದು. ಜತೆಗೆ, ಬೆಳೆ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೆ ಒಣಗಲು ಬಿಟ್ಟಂತಹ ಕಟಾವು ಮಾಡಿದ ಎರಡು ವಾರಗಳೊಳಗೆ (14 ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ಪರಿಹಾರ ಪಡೆಯಬಹುದಾಗಿದೆ.

Belevime Premium calculator-ಈ ವರ್ಷ ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಿದರೆ ಎಷ್ಟು ಬೆಳೆವಿಮೆ ಬರಲಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2025-26" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Premium calculator" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,ಬೆಳೆ,ಎಕರೆ,ಗುಂಟೆ selet ಮಾಡಿ Show premium ಮೇಲೆ ಕ್ಲಿಕ್ ಮಾಡಿ


ಈ ಕೆಳಗಿನಂತೆ ಯಾವ ಬೆಳೆಗೆ ಎಷ್ಟು ಬೆಳೆವಿಮೆ(crop insurance) ಸಿಗಲಿದೆ ಎಂಬ ಮಾಹಿತಿ ದೊರೆಯಲಿದೆ.

]]>
Wed, 11 Jun 2025 17:55:18 +0530 shivuagrico
Mrugashira Male nakshatra&ಕೈಕೊಟ್ಟ ರೋಹಿಣಿ ಮಳೆ,ಕೈಹಿಡಿಯಲಿದೆ ಮೃಗಶಿರ ಮಳೆ https://krushirushi.in/Mrugashira-Male-nakshatra-2157 https://krushirushi.in/Mrugashira-Male-nakshatra-2157 Mrugashira Male nakshatra-ಕೈಕೊಟ್ಟ ರೋಹಿಣಿ ಮಳೆ,ಕೈಹಿಡಿಯಲಿದೆ ಮೃಗಶಿರ ಮಳೆ

ರಾಜ್ಯದಲ್ಲಿ ಮಳೆಯು ಮತ್ತೆ ಅಬ್ಬರಿಸುವ ಲಕ್ಷಣಗಳಿದ್ದು, ಜೂನ್ 11 ರಿಂದ ಜೂನ್‌14ರ ವರೆಗೆ ಕರಾವಳಿ ಕರ್ನಾಟಕ ಸೇರಿದಂತೆ 13 ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಈ ಜಿಲ್ಲೆಗಳಿಗೆ ಜೂನ್ 12 ರಿಂದ 14ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. 


ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜೂ.12 ರಿಂದ 15ರವರೆಗೆ 'ರೆಡ್ ಅಲರ್ಟ್‌' ಘೋಷಿಸಿದೆ. 

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿಯಾರ್‌ನ್ 15 ಡಿಗ್ರಿ ಉತ್ತರ ಅಕ್ಷಾಂಶದ ಉದ್ದಕ್ಕೂ ಇದ್ದು, 3.1ಕಿ.ಮೀ ಹಾಗೂ 5.1ಕಿ.ಮೀ ಎತ್ತರದ ಮಧ್ಯದಲ್ಲಿ ಇದೆ. ಇದರ ಪ್ರಭಾವದಿಂದ ಕರ್ನಾಟಕ ರಾಜ್ಯಾದ್ಯಂತ ಜೂನ್ 11ರಂದು ಹಲವು ಕಡೆ ಮಳೆಯಾಗಲಿದೆ. ಜೂನ್ 12 ರಿಂದ 16ರ ವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಗುಡುಗು, ಮಿಂಚು ಸಮೇತವಾಗಿ ಜೊತೆಗೆ ಗಾಳಿಯ ವೇಗವು ಸುಮಾರು 50 ಕಿ.ಮೀ ಇರಲಿದೆ ಎಂದು ತಿಳಿಸಿದ್ದಾರೆ. 

ಯಾವ ಜಿಲ್ಲೆಗಳಲ್ಲಿ ಮಳೆ ? 

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳ ಕೆಲವು ಕಡೆ ಅತೀ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. 

ಬೆಂಗಳೂರಿನಲ್ಲಿ ಜೂನ್ 14ರ ವರೆಗೆ ಕೆಲವು ಕಡೆ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಮಂಗಳವಾರ ವಿಜಾಪುರದಲ್ಲಿ 5, ತುಮಕೂರು 3 ಸೆಂ.ಮೀ ಮಳೆಯಾಗಿದೆ ಎಂದು ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಜೂನ್ 11 ರಂದು ಕರಾವಳಿ ಹಾಗೂ ಮಧ್ಯ ಕರ್ನಾಟಕದಲ್ಲಿ ಭಾರೀ ಮಳೆ ಆಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.

ಜೂನ್‌ 11 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ದಾವಣಗೆರೆ, ಧಾರವಾಡ, ಗದಗ , ಕೊಪ್ಪಳ. ಹಾಗೂ ರಾಯಚೂರಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಅತಿ ಭಾರೀ ಮಳೆಯ ಮುನ್ಸೂಚನೆ ಇದೆ. ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಜೂನ್‌ 12 ಕ್ಕೆ ರೆಡ್ ಅಲರ್ಟ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗಲಿರುವ ಹಿನ್ನೆಲೆ ರೆಡ್ ಅಲರ್ಟ್ ಕೊಡಲಾಗಿದೆ. ಉಳಿದ ಜಿಲ್ಲೆಗಳಿಗೂ ಮಳೆ ತೀವ್ರ ಗೊಳ್ಳಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.


ಜೂನ್‌ 13 ರಂದು 10 ಜಿಲ್ಲೆಗಳಿಗೆ ರೆಡ್ ಅಲರ್ಟ್

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿಗೂ ಅತ್ಯಂತ ಭಾರೀ ಮಳೆ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಕೊಡಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಮಳೆ ಆರ್ಭಟ ಇರುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಕೊಡಲಾಗಿದೆ.

ಉತ್ತರ ಒಳನಾಡಿಗೆ ಭಾರಿ ಮಳೆ

ಜೂ.10 ಮತ್ತು 11ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಚಿತ್ರದುರ್ಗ, ಹಾವೇರಿ, ಕೊಪ್ಪಳ, ಗದಗ, ಧಾರವಾಡ, ರಾಯಚೂರು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್‌ ನೀಡಲಾಗಿದೆ. ಜೂ.12 ಮತ್ತು 13ರಂದು ಆರೆಂಜ್‌ ಅಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

]]>
Wed, 11 Jun 2025 06:51:14 +0530 shivuagrico
Pmkisan 20th instalment date&ಪಿಎಂ ಕಿಸಾನ್ 20ನೇ ಕಂತಿನ ಬಿಡುಗಡೆ ದಿನಾಂಕ ಪ್ರಕಟ,ಈ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ 20ನೇ ಕಂತು https://krushirushi.in/Pmkisan-20th-instalment-date-2156 https://krushirushi.in/Pmkisan-20th-instalment-date-2156 Pmkisan 20th instalment date-ಪಿಎಂ ಕಿಸಾನ್ 20ನೇ ಕಂತಿನ ಬಿಡುಗಡೆ ದಿನಾಂಕ ಪ್ರಕಟ,ಈ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ 20ನೇ ಕಂತು

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬ‌ರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಹಿಂದೆ 19ನೇ ಕಂತನ್ನು ಫೆಬ್ರುವರಿ 24ರಂದು ಬಿಡುಗಡೆ ಮಾಡಲಾಗಿತ್ತು.ಈಗ 20ನೇ ಕಂತನ್ನು ಜೂನ್ 20ರಂದು ಬಿಡುಗಡೆ ಮಾಡಲಾಗುವುದು ಎಂದು ಪ್ರಕಟಿಸಲಾಗಿದೆ.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 20ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 20th instalment eligible list

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

]]>
Tue, 10 Jun 2025 07:11:56 +0530 shivuagrico
Karnataka rains&ವಾಯುಭಾರ ಕುಸಿತದಿಂದ ಮತ್ತೆ ಮುಂಗಾರು ಚುರುಕು,ಈ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ https://krushirushi.in/Karnataka-rains-2155 https://krushirushi.in/Karnataka-rains-2155 Karnataka rains-ವಾಯುಭಾರ ಕುಸಿತದಿಂದ ಮತ್ತೆ ಮುಂಗಾರು ಚುರುಕು,ಈ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ

ರಾಜ್ಯದ ವಿವಿಧೆಡೆ ಸೋಮವಾರದಿಂದ ಭಾರಿ ಗಾಳಿ ಸಹಿತ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 28 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. 

ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಕರಾವಳಿ ಜಿಲ್ಲೆಗಳ ಹಲವೆಡೆ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬುಧವಾರ ಈ ಜಿಲ್ಲೆಗಳಿಗೂ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. 

ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಹಾವೇರಿ, ಬೆಳಗಾವಿ, ಧಾರವಾಡ ಮತ್ತು ಯಾದಗಿರಿ ಜಿಲ್ಲೆಯ ಹಲವೆಡೆ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ದಕ್ಷಿಣ ಒಳನಾಡಿನಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ, ವಿಜಯನಗರ ಮತ್ತು ಕೋಲಾರದಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ಗುರುವಾರದಿಂದ ರಾಜ್ಯದ ವಿವಿಧೆಡೆ ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆಯಿದ್ದು, ಧಾರಾಕಾರ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಜೂನ್ 11ರಂದು ಸಹ ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಸೂಚನೆಗಳಿವೆ. ಜೂನ್ 11ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚೆನೆ ಇದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲೂ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ನಾಳೆಯೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜೂನ್ 12ರಿಂದ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ) ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 11ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಹೆಚ್ಚಾಗುವ ಲಕ್ಷಣಗಳಿವೆ. 

 *ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.* 

ಬಂಗಾಳಕೂಲ್ಲಿಯ ಮೇಲ್ಮೈ ಸುಳಿಗಾಳಿಯು ಜೂನ್ 11ರ ರಾತ್ರಿ ಅಥವಾ 12ರಂದು ಆಂದ್ರಾ ಕರಾವಳಿಗೆ ಪ್ರವೇಶಿಸುವ ಸಾಧ್ಯತೆಗಳಿವೆ. ಇದರ ಪರಿಣಾಮದಿಂದ ಮುಂಗಾರು ಚುರುಕಾಗಿದ್ದು, ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.

]]>
Tue, 10 Jun 2025 06:57:52 +0530 shivuagrico
Bele vime&ಇನ್ನು ಮುಂದೆ ವಾರದೊಳಗೆ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ&ಕೃಷಿ ಸಚಿವ ಚೆಲುವರಾಯಸ್ವಾಮಿ https://krushirushi.in/Bele-vime-2154 https://krushirushi.in/Bele-vime-2154 Bele vime-ವಾರದೊಳಗೆ ಬೆಳೆ ವಿಮೆ ಪರಿಹಾರ-ಕೃಷಿ ಸಚಿವ ಚೆಲುವರಾಯಸ್ವಾಮಿ

ವಾರದಲ್ಲಿ ವಿಮೆ ಹಣ ಜಮಾ: 'ಬೆಳೆ ವಿಮೆ' 
ಪರಿಹಾರ ಮೊತ್ತ ವಿಳಂಬವಾಗುತ್ತಿರುವುದಕ್ಕೆ ಹೆಚ್ಚಿನ ಕರೆಗಳ ಬಂದವು. ರಾಣೆಬೆನ್ನೂರು ತಾಲೂಕಿನ ಜೋಯಿಸರ ಹಳ್ಳಿಯ ಶಂಕರಪ್ಪ ರಾಮಪ್ಪ, ಕಲಬುರಗಿಯ ಬಾಬು ಸಾಬ್ ಪಾಟೀಲ್, ಶಿರಾ ತಾಲೂಕಿನ ತಿಮ್ಮರಾಜು, ವಿಜಯಪುರದ ಹನುಮಂತ, ರಾಯಚೂರು ಮಾನ್ವಿ ತಾಲೂಕಿನ ಮಿರಾಜುದ್ದೀನ್, ಗೌರಿಬಿದನೂರು ತಾಲೂಕಿನ ಸತೀಶ್ ಸೇರಿದಂತೆ ಇನ್ನೂ ಕೆಲವರು ಪ್ರಸ್ತಾಪಿಸಿದ ಬೆಳೆ ವಿಮೆ ಸೂಕ್ತ ಸಮಯಕ್ಕೆ ಬಾರದಿರುವ ವಿಚಾರಕ್ಕೆ ಸಚಿವರು ಸ್ಪಂದಿಸಿದರು. 



"ಸಮೀಕ್ಷೆ ನಡೆಸಿ ಬೆಳೆ ಹಾನಿಯಾಗಿರುವುದು ಖಾತರಿಯಾಗಷ್ಟೇ ಬೆಳೆ ವಿಮೆ ಪರಿಹಾರ ನೀಡಲಾಗುತ್ತದೆ. ಈಗಾಗಲೇ ಬೆಳೆ ವಿಮೆ ಹಣ ರೈತರ ಖಾತೆಗೆ ಜಮೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕಳೆದ ವರ್ಷದ ಬೆಳೆ ವಿಮೆ ಪರಿಹಾರ ವಾರರೊಳಗೆ ರೈತರ ಖಾತೆಗೆ ಜಮೆಯಾಗಲಿದೆ. ಕಲಬುರಗಿಯಲ್ಲಿ ಕಳೆದ ಅಕ್ಟೋಬ‌ರ್-ನವೆಂಬರ್ ನಲ್ಲಿ ಆದ ಬೆಳೆಹಾನಿಗೆ 600 ಕೋಟಿ ಪರಿಹಾರ ನೀಡಲಾಗಿದೆ ಎಂದು ಹೇಳಿದರು.

 ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Mon, 09 Jun 2025 19:59:21 +0530 shivuagrico
Bele sala baddi manna&ದೇಶದ ರೈತರಿಗೆ ಸಿಹಿಸುದ್ದಿ ನೀಡಿದ ಕೇಂದ್ರಸರ್ಕಾರ,ಶೇ 3% ಬಡ್ಡಿ ಮನ್ನಾದೊಂದಿಗೆ 3 ಲಕ್ಷ ಸಾಲ ಸೌಲಭ್ಯ https://krushirushi.in/Bele-sala-baddi-manna-2153 https://krushirushi.in/Bele-sala-baddi-manna-2153 Bele sala baddi manna-ದೇಶದ ರೈತರಿಗೆ ಸಿಹಿಸುದ್ದಿ ನೀಡಿದ ಕೇಂದ್ರಸರ್ಕಾರ,ಶೇ 3% ಬಡ್ಡಿ ಮನ್ನಾದೊಂದಿಗೆ 3 ಲಕ್ಷ ಸಾಲ ಸೌಲಭ್ಯ

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ದೇಶದ ಲಕ್ಷಾಂತರ ರೈತರಿಗೆ ತುಂಬಾ ಉಪಯುಕ್ತವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ. ಈ ಯೋಜನೆಯ ಮೂಲಕ ರೈತರು ಕಡಿಮೆ ಬಡ್ಡಿದರದಲ್ಲಿ ಸಕಾಲಿಕ ಸಾಲ ಸೌಲಭ್ಯವನ್ನ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌'ನಲ್ಲಿ ಅವರು ಇದನ್ನ ಘೋಷಿಸಿದ್ದು, ಈ ಸಾಲಗಳು ರೈತರಿಗೆ ಬೀಜಗಳು, ರಸಗೊಬ್ಬರಗಳು, ಕೀಟನಾಶಕಗಳಂತಹ ಕೃಷಿ ಅಗತ್ಯಗಳನ್ನ ಪೂರೈಸಲು ಉಪಯುಕ್ತವಾಗಿವೆ ಎಂದು ಅವರು ಹೇಳಿದರು.

ಸಮಯಕ್ಕೆ ಸರಿಯಾಗಿ ಹಣ ಪಾವತಿಸಿದರೆ.!
ಈ ಯೋಜನೆಯಡಿಯಲ್ಲಿ ಇದುವರೆಗೆ 465 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನ ಅನುಮೋದಿಸಲಾಗಿದೆ ಮತ್ತು 5.7 ಲಕ್ಷ ಕೋಟಿ ರೂ.ಗಳ ಸಾಲವನ್ನ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವರು ಬಹಿರಂಗಪಡಿಸಿದರು. ರೈತರು ಈ ಸಾಲವನ್ನು ಸಕಾಲದಲ್ಲಿ ಮರುಪಾವತಿಸಿದರೆ, ಅವರು ಕೇವಲ 4 ಪ್ರತಿಶತದಷ್ಟು ಬಡ್ಡಿದರದಲ್ಲಿ 3 ಲಕ್ಷ ರೂ.ಗಳವರೆಗೆ ಸಾಲವನ್ನು ಪಡೆಯಬಹುದು. ಇದರ ಜೊತೆಗೆ, ಸಕಾಲಿಕ ಸಾಲ ಮರುಪಾವತಿಗೆ 3 ಪ್ರತಿಶತದಷ್ಟು ಹೆಚ್ಚುವರಿ ಪ್ರೋತ್ಸಾಹಕ ಬಡ್ಡಿ ಸಬ್ಸಿಡಿಯನ್ನು ಸಹ ಒದಗಿಸಲಾಗುತ್ತದೆ. ಪರಿಣಾಮವಾಗಿ, ರೈತರ ಬಡ್ಡಿದರವು 4 ಪ್ರತಿಶತಕ್ಕೆ ಕಡಿಮೆಯಾಗುತ್ತದೆ. ಈ ಸಂದರ್ಭದಲ್ಲಿ, ರೈತರು ಪ್ರತಿ ಲಕ್ಷ ಸಾಲದ ಮೇಲಿನ ಬಡ್ಡಿಯ ಮೇಲೆ ವರ್ಷಕ್ಕೆ 9,000 ರೂ.ಗಳನ್ನು ಉಳಿಸುತ್ತಾರೆ.

ಈ ಯೋಜನೆಯ ಮೂಲಕ, ಕೇಂದ್ರ ಸರ್ಕಾರವು ಕೆಸಿಸಿಯ ಸಬ್ಸಿಡಿ ಸಾಲ ಮಿತಿಯನ್ನ ರೂ. 3 ಲಕ್ಷದಿಂದ ರೂ. 5 ಲಕ್ಷಕ್ಕೆ ಹೆಚ್ಚಿಸಿದೆ. ಇದು ಸುಮಾರು 7.7 ಕೋಟಿ ರೈತರಿಗೆ ಪ್ರಯೋಜನವನ್ನ ನೀಡಿದೆ. ಈ ಯೋಜನೆಯು ಕೃಷಿ ಉತ್ಪನ್ನಗಳ ಖರೀದಿ ಮತ್ತು ಇತರ ಅಗತ್ಯಗಳಿಗಾಗಿ ರೈತರಿಗೆ ಕೈಗೆಟುಕುವ ದರದಲ್ಲಿ ಸಾಲಗಳನ್ನ ಲಭ್ಯವಾಗುವಂತೆ ಮಾಡಿದೆ. ಸಮಯಕ್ಕೆ ಸರಿಯಾಗಿ ಸಾಲವನ್ನ ಮರುಪಾವತಿಸುವ ರೈತರಿಗೆ ಹೆಚ್ಚುವರಿ 3% ಬಡ್ಡಿ ಸಬ್ಸಿಡಿ ನೀಡಲಾಗುವುದು. ಸಾಲದ ಮಿತಿಯಲ್ಲಿ ಬೆಳೆ ಸಾಲಗಳಿಗೆ ಆದ್ಯತೆ ನೀಡಲಾಗುವುದು. ಉಳಿದ ಮೊತ್ತವನ್ನ ಪಶುಸಂಗೋಪನೆ ಮತ್ತು ಮೀನುಗಾರಿಕೆಯಂತಹ ಪೂರಕ ಚಟುವಟಿಕೆಗಳಿಗೆ ಸಾಲಕ್ಕಾಗಿ ಬಳಸಲಾಗುತ್ತದೆ.

ರೈತರ ಕಲ್ಯಾಣಕ್ಕಾಗಿ ಸರ್ಕಾರದ ಕ್ರಮಗಳು.!
ಕೃಷಿ ಬಜೆಟ್ ಹೆಚ್ಚಳ : 2013-14 ರಲ್ಲಿ 21,500 ಕೋಟಿ ರೂ.ಗಳಿದ್ದ ಕೃಷಿ ಬಜೆಟ್ ಅನ್ನು 2024-25 ರಲ್ಲಿ 1.22 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಇದು 5 ಪಟ್ಟು ಹೆಚ್ಚಳವಾಗಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN): ಈ ಯೋಜನೆಯು ರೈತರಿಗೆ ನೇರ ನಗದು ಒದಗಿಸುತ್ತದೆ. ಇಲ್ಲಿಯವರೆಗೆ, 11 ಕೋಟಿಗೂ ಹೆಚ್ಚು ರೈತರಿಗೆ 3.46 ಲಕ್ಷ ಕೋಟಿ ರೂ.ಗಳನ್ನು ವಿತರಿಸಲಾಗಿದೆ.

ಬೆಳೆ ವಿಮಾ ಯೋಜನೆ (PMFBY) : ಈ ಯೋಜನೆಯ ಮೂಲಕ ರೈತರು ಬೆಳೆ ನಷ್ಟದಿಂದ ರಕ್ಷಣೆ ಪಡೆಯುತ್ತಾರೆ. ಇಲ್ಲಿಯವರೆಗೆ, 63.11 ಕೋಟಿ ರೈತರು ಅರ್ಜಿ ಸಲ್ಲಿಸಿದ್ದಾರೆ. ಆ ಪ್ರಕ್ರಿಯೆಯಲ್ಲಿ, ಅವರು 1.65 ಲಕ್ಷ ಕೋಟಿ ವಿಮಾ ಹಕ್ಕು ಪಡೆದಿದ್ದಾರೆ.

ಅರ್ಹ ಕೃಷಿ ಚಟುವಟಿಕೆಗಳು/ಯೋಜನೆಗಳು ಈ ಕೆಳಗಿನಂತಿವೆ

ಇ-ಮಾರುಕಟ್ಟೆ ವೇದಿಕೆ ಸೇರಿದಂತೆ ಸರಬರಾಜು ಸರಪಳಿ ಸೇವೆಗಳು ಗೋದಾಮುಗಳು ಮತ್ತು ಸೈಲೊಗಳು + ಪ್ಯಾಕ್ ಹೌಸ್‌ಗಳು ವಿಂಗಡಣೆ ಮತ್ತು ಶ್ರೇಣೀಕರಣ ಘಟಕಗಳು ಶೀತಲಗೃಹ ಸರಪಳಿಗಳು ಸಾಗಾಣಿಕೆ ಸೌಲಭ್ಯಗಳು ಪ್ರಾಥಮಿಕ ಸಂಸ್ಕರಣಾ ಕೇಂದ್ರಗಳು ಹಣ್ಣು ಮಾಗಿಸುವ ಘಟಕಗಳು

ಮೌಲ್ಯಮಾಪನ ಘಟಕಗಳು ಸಂಕುಚಿತ ಜೈವಿಕ ಅನಿಲ (CBG) ಸ್ಥಾವರ + ಸಾವಯವ ಪರಿಕರ ಉತ್ಪಾದನೆ + ಜೈವಿಕ ಉತ್ತೇಜಕ ಉತ್ಪಾದನಾ ಘಟಕಗಳು * ಸಸ್ಯ ನರ್ಸರಿ /ಅಂಗಾಂಶ ಕೃಷಿ ಬೀಜ ಸಂಸ್ಕರಣೆ + ಕೃಷಿ ಯಂತ್ರಧಾರೆ ಕೇಂದ್ರಗಳು ಸ್ಮಾರ್ಟ್ ಮತ್ತು ನಿಖರವಾದ ಕೃಷಿ ಸಂಯೋಜಿತ ಸ್ಪಿರುಲಿನಾ ಉತ್ಪಾದನೆ ಮತ್ತು ಸಂಸ್ಕರಣಾ ಘಟಕಗಳು ರೇಷ್ಮೆ ಕೃಷಿ ಸಂಸ್ಕರಣಾ ಘಟಕ • ಜೇನು ಸಂಸ್ಕರಣಾ ಘಟಕ ಪ್ಲಾಂಟ್ ಕ್ಯಾರಂಟೈನ್ ಘಟಕಗಳು ಮತ್ತು ಸಾಮೂಹಿಕ ಕೃಷಿ ಅಡಿ: ಜಲಕೃಷಿ, ವಾಯುಕೃಷಿ, ಹಸಿರುಮನೆ, ಬಹುಮಹಡಿ ಕೃಷಿ, ಅಣಬೆ ಬೇಸಾಯ

ಅರ್ಹ ಫಲಾನುಭವಿಗಳು

ರೈತರು/ ರೈತ ಉತ್ಪಾದಕ ಸಂಸ್ಥೆಗಳು, ಪ್ರಾಂತೀಯ ಸಹಕಾರ ಒಕ್ಕೂಟಗಳು ಕೃಷಿ ಉದ್ಯಮಿಗಳು / ನವೋದ್ಯಮಿಗಳು ಪ್ರಾಥಮಿಕ ಕೃಷಿ ಕ್ರೆಡಿಟ್ ಸಹಕಾರ ಸಂಘಗಳು + ವಿವಿಧೋದ್ದೇಶ ಸಹಕಾರ ಸಂಘಗಳು * ಸ್ವ-ಸಹಾಯ ಗುಂಪುಗಳು / ಜಂಟಿ ಬಾಧ್ಯತಾ ಗುಂಪುಗಳು / ಖಾಸಗಿ ಮಾಲೀಕತ್ವ ಸಂಸ್ಥೆಗಳು.
ಯೋಜನೆಯಲ್ಲಿ ಭಾಗವಹಿಸುವ ಹಣಕಾಸು ಸಂಸ್ಥೆಗಳು:
ರಾಷ್ಟ್ರೀಕೃತ ಬ್ಯಾಂಕುಗಳು + ಶೆಡ್ಯೂಲ್ಡ್ ಸಹಕಾರಿ ಬ್ಯಾಂಕ್ ಗಳು + ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ ಗಳು ಸಣ್ಣ ಹಣಕಾಸು ಬ್ಯಾಂಕುಗಳು + ಬ್ಯಾಂಕೇತರ ಹಣಕಾಸು ಸಂಸ್ಥೆಗಳು + ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (ಎನ್ ಸಿಡಿಸಿ).

ಅರ್ಜಿ ಸಲ್ಲಿಕೆ ಪ್ರಕ್ರಿಯೆ


ಮೊದಲು ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://agriinfra.dac.gov.in/Home/Login

ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ Beneficiary ಮೇಲೆ ಕ್ಲಿಕ್ ಮಾಡಿ
ನಂತರ Benefit under other scheme ಮೇಲೆ ಕ್ಲಿಕ್ ಮಾಡಿ

ನಂತರ ನೀವು ಅರ್ಜಿ ಸಲ್ಲಿಸಲು ಬಯಸುವ ಯೋಜನೆಯ ಮೇಲೆ ಕ್ಲಿಕ್ ಮಾಡಿ
ಉದಾಹರಣೆಗೆ ಈಗಾಗಲೇ ನೀವು PMFME ಯೋಜನೆಯ ಫಲಾನುಭವಿಗಳಾಗಿದ್ದು,ನಿಮ್ಮ ಸಾಲದ ಮೇಲೆ 3% ಬಡ್ಡಿ ಸಬ್ಸಿಡಿ ಪಡೆಯಬಹುದು

ನಂತರ ನಿಮ್ಮ ಹೆಸರು, ಮೊಬೈಲ್ ನಂಬರ್, ಆಧಾರ್ ನಂಬರ್ ಹಾಕಿ Send OTP ಮೇಲೆ ಕ್ಲಿಕ್ ಮಾಡಿ,ಮೊಬೈಲ್ ಗೆ ಬರುವ OTP ಹಾಕಿ Register ಮಾಡಿ

ನಿಮ್ಮ ಮೊಬೈಲ್ ಗೆ ID ಮತ್ತು password ಬರುತ್ತದೆ,ಅದನ್ನು ಹಾಕಿ ಲಾಗಿನ್ ಮಾಡಿ

ನಂತರ setting icon ಮೇಲೆ ಕ್ಲಿಕ್ ಮಾಡಿ Apply for interest subvention under other scheme ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಮಾಹಿತಿ ತುಂಬಿ,ನಿಮ್ಮ ಬ್ಯಾಂಕ್ ನ ಲೋನ್ Saction letter ಹಾಗೂ ಯೋಜನಾ ವರದಿಯನ್ನು ಅಪ್ಲೌಡ್ ಮಾಡಿ,Submit ಮೇಲೆ ಕ್ಲಿಕ್ ಮಾಡಿ


CPMU, ಕೃಷಿ ಮತ್ತು ರೈ ಕಲ್ಯಾಣ ಮಂತ್ರಾಲಯದ ಮೂಲಕ ಪರಿಶೀಲಿಸಲಾದ ಅರ್ಜಿಯನ್ನು ಬ್ಯಾಂಕ್‌ ಶಾಖೆಗೆ ಆನ್‌ ಲೈನ್‌ ನಲ್ಲಿ ವರ್ಗಾಯಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕೃಷಿ/ತೋಟಗಾರಿಕೆ ಇಲಾಖೆ, ಜಿಲ್ಲಾ ನಬಾರ್ಡ್‌ ವ್ಯವಸ್ಥಾಪಕರು, ನಿಮ್ಮ ವ್ಯಾಪ್ತಿಯ ಬ್ಯಾಂಕ್/‌ ಹಣಕಾಸು ಸಂಸ್ಥೆಗಳನ್ನು ಸಂಪರ್ಕಿಸಬಹುದು.

]]>
Mon, 09 Jun 2025 12:08:29 +0530 shivuagrico
ಗೃಹಿಣಿಯರಿಗೆ ವರಮಹಾಲಕ್ಷ್ಮಿ ಹಬ್ಬಕ್ಕೆ ಭರ್ಜರಿ ಗಿಫ್ಟ್,ಈ ಪಟ್ಟಿಯಲ್ಲಿರುವವರಿಗೆ ಕೊನೆಗೂ ಜಮಾ ಆಯ್ತು ಬಾಕಿ ಗೃಹಲಕ್ಷ್ಮಿ ಹಣ&Varamahalakshmi gift to Gruhalakshmi beneficiaries https://krushirushi.in/Gruhalakshmi-pending-amount-2152 https://krushirushi.in/Gruhalakshmi-pending-amount-2152 ಗೃಹಿಣಿಯರಿಗೆ ವರಮಹಾಲಕ್ಷ್ಮಿ ಹಬ್ಬಕ್ಕೆ ಭರ್ಜರಿ ಗಿಫ್ಟ್,ಈ  ಪಟ್ಟಿಯಲ್ಲಿರುವವರಿಗೆ ಕೊನೆಗೂ ಜಮಾ ಆಯ್ತು ಬಾಕಿ ಗೃಹಲಕ್ಷ್ಮಿ ಹಣ-Varamahalakshmi gift to Gruhalakshmi beneficiaries 

 ಕಳೆದ ಎರಡು ತಿಂಗಳಿಂದ ಗೃಹ ಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ನೀಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯದಲ್ಲೇ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪಲಿದೆ ಎಂದು ಹೇಳಿದ್ದಾರೆ. ಈಗಾಗಲೇ ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ನೀಡಲಾಗಿದ್ದು, ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಹಣವನ್ನು ಕೂಡ ಈಗಾಗಲೇ ಬಿಲ್ ಮಾಡಲಾಗಿದೆ ಎಂದಿದ್ದಾರೆ. 


ಇನ್ನು ಮಹಿಳೆಯರಿಗೆ 2000/- ನೀಸುವ ಗೃಹಲಕ್ಷ್ಮಿ ಯೋಜನೆಯ ಹಣ ಎರಡು ತಿಂಗಳಿಂದ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ ಎಂಬ ಮಾಹಿತಿಯಿದೆ. ಆದ್ರೆ ಮಾರ್ಚ್ ಆರ್ಥಿಕ ವರ್ಷದ ಕೊನೆಯಾಗಿರುವ ಕಾರಣ ಸ್ವಲ್ಪ ಹೆಚ್ಚು ಕಮ್ಮಿಯಾಗಿದೆ. ಆದ್ರೆ ಕೆಲವೇ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ. ಆದಷ್ಟು ಬೇಗ, ಬಹುತೇಕ ಇನ್ನೊಂದು ವಾರದಲ್ಲಿ ಮಹಿಳೆಯರಿಗೆ ಹಣ ಹಾಕಲಿದ್ದೇವೆ ಎಂದಿದ್ದಾರೆ.

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Mon, 09 Jun 2025 06:07:48 +0530 shivuagrico
Mungaru&ಬಿತ್ತನೆ ಮಾಡಿ ಮಳೆಗೆ ಕಾಯುತ್ತಿದ್ದ ರೈತರಿಗೆ ಸಿಹಿಸುದ್ದಿ,ಮತ್ತೆ ಮುಂಗಾರು ಚುರುಕು https://krushirushi.in/Mungaru-2051 https://krushirushi.in/Mungaru-2051

Mungaru-ಬಿತ್ತನೆ ಮಾಡಿ ಮಳೆಗೆ ಕಾಯುತ್ತಿದ್ದ ರೈತರಿಗೆ ಸಿಹಿಸುದ್ದಿ,ಮತ್ತೆ ಮುಂಗಾರು ಚುರುಕು


ರಾಜ್ಯದ ಹಲವೆಡೆ ಇದೇ ಸೋಮವಾರದಿಂದ (ಜೂನ್‌ 9)ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಗ್ಗಿದ ಮಳೆ ಮತ್ತೆ ಬಿರುಸು ಪಡೆಯುವ ಸಾಧ್ಯತೆಯಿದ್ದು, ಸೋಮವಾರದಿಂದ ಮೂರು ದಿನಗಳು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿ, ರಾಜ್ಯದ ಉಳಿದ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ, ವಿಜಯಪುರ, ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಯ ಹಲವೆಡೆ ಗುಡುಗು ಹಾಗೂ ಗಂಟೆಗೆ 30 ಕಿ.ಮೀನಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ರಾಮನಗರ, ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ಹಲವೆಡೆ ಭಾರಿ ಗಾಳಿಯೊಂದಿಗೆ ಮಳೆಯಾಗುವ ಸಂಭವವಿದೆ ಎಂದು ಹೇಳಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ 11ರಿಂದ ಮಳೆ ತೀವ್ರತೆ ಹೆಚ್ಚುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಅಲ್ಪ ಅವಧಿಯ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಜೂನ್ 8ರಂದು ಅಲ್ಲಲ್ಲಿ ತುಂತುರು ಹಾಗೂ 9ರಿಂದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜೂನ್ 11ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಹಾಸನ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. ಚಿಕ್ಕಮಗಳೂರು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 10ರ ತನಕ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿದ್ದು, 11ರಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು,
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಜೂನ್ 8ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಜೂನ್ 11ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ. 

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11ರಿಂದ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.

]]>
Sun, 08 Jun 2025 20:05:38 +0530 shivuagrico
ಸ್ವಾವಲಂಭಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ 3 ಲಕ್ಷ ರೂಪಾಯಿ ಸಬ್ಸಿಡಿ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ&Vehicle subsidy scheme  https://krushirushi.in/Vehicle-subsidy-scheme-2025 https://krushirushi.in/Vehicle-subsidy-scheme-2025 ಸ್ವಾವಲಂಭಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ 3 ಲಕ್ಷ ರೂಪಾಯಿ ಸಬ್ಸಿಡಿ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Vehicle subsidy scheme 

ಸ್ವಾವಲಂಬಿ ಸಾರಥಿ ಯೋಜನೆ

ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.

ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು

ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.

ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.

ಡ್ರೈವಿಂಗ್ ಲೈಸೆನ್ಸ್

ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.

ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಹಿಂದುಳಿದ ವರ್ಗದವರಾಗಿರಬೇಕು.


ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಬ್ಯಾಂಕ್ ಪಾಸ್ ಬುಕ್

ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ

(DL) ಡ್ರೈವಿಂಗ್ ಲೈಸೆನ್ಸ್

ಫೋಟೋ

ಮೊಬೈಲ್ ನಂಬರ್

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in  ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಿ ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್, 31 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು.

]]>
Sun, 08 Jun 2025 08:23:50 +0530 shivuagrico
ಗಂಗಾ ಕಲ್ಯಾಣ ಯೋಜನೆಯಡಿ ಬೊರ್ವೇಲ್ ಕೊರೆಸಲು 3.5 ಲಕ್ಷ ಸಬ್ಸಿಡಿ, ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್&Ganga kalyana yojane 2025 https://krushirushi.in/Ganga-kalyana-yojane-2025 https://krushirushi.in/Ganga-kalyana-yojane-2025 ಗಂಗಾ ಕಲ್ಯಾಣ ಯೋಜನೆಯಡಿ ಬೊರ್ವೇಲ್ ಕೊರೆಸಲು 3.5 ಲಕ್ಷ ಸಬ್ಸಿಡಿ, ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್-Ganga kalyana yojane 2025

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://kmdconline.karnataka.gov.in/Portal/login

ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ ಸಲ್ಲಿಸಿ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,captcha code ಹಾಕಿ Next ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಗೆ ಬರುವ OTP ಹಾಕಿ,continue ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ Digilocker account ತೆರೆದುಕೊಳ್ಳುತ್ತದೆ, Allow ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 6 ಸಂಖ್ಯೆಯ mPIN ಹಾಕಿ ಸಲ್ಲಿಸಿ ಕ್ಲಿಕ್ ಮಾಡಿ

ನಂತರ ಅಗತ್ಯ ದಾಖಲೆಗಳನ್ನು ಅಪ್ಲೌಡ್ ಮಾಡಿ ಅರ್ಜಿ ಸಲ್ಲಿಸಿ

ಅಥವಾ

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ಅರ್ಜಿ ನಮೂನೆಯನ್ನು ಭರ್ತಿ ಮಾಡಿ,ದೇವರಾಜ ಅರಸು ಇಲಾಖೆಗೆ ಸಲ್ಲಿಸಿ

https://kvcdc.karnataka.gov.in/uploads/media_to_upload1658122511.pdf

ಯೋಜನೆಯಡಿ ಸಣ್ಣ ಹಾಗೂ ಅತೀ ಸಣ್ಣ ರೈತರು ಅರ್ಜಿ ಸಲ್ಲಿಸಿ ಉಚಿತವಾಗಿ ಕೊಳವೆ ಬಾವಿ/ ತೆರೆದ ಬಾವಿಯ ಸೌಲಭ್ಯ ಪಡೆಯಬಹುದಾಗಿದ್ದು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರಕಾರದ ಬಜೆಟ್‌ನಲ್ಲಿ ಬಿಡುಗಡೆಯಾದ ಅನುದಾನದ ಆಧಾರದ ಮೇಲೆ ಗಂಗಾ ಕಲ್ಯಾಣ ಯೋಜನೆಗೆ ಹಣ ಬಿಡುಗಡೆ ಆಗುತ್ತದೆ.

ಅಂದರೆ ಆಯಾ ನಿಗಮಗಳಲ್ಲಿ ಅದರದ್ದೇ ಆದ ನಿಯಮಗಳು ಜಾರಿಯಲ್ಲಿವೆ.

ಆಯ್ಕೆ ಪಟ್ಟಿ ಮತ್ತು ವಿಧಾನ ಹೇಗೆ?


ಜಿಲ್ಲಾ ವ್ಯವಸ್ಥಾಪಕರು ಪ್ರತೀ ಜಿಲ್ಲೆಯಲ್ಲಿ ಜಾಹೀರಾತಿನ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸುತ್ತಾರೆ. ಆನ್‌ಲೈನ್‌ನಲ್ಲಿ ದಾಖಲಾತಿಯೊಂದಿಗೆ ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾ ವ್ಯವಸ್ಥಾಪಕರು ಗಮನಿಸಿ ಶಾಸಕರ ನೇತೃತ್ವದ ತಾಲೂಕು ಸಮಿತಿಗೆ ಅರ್ಜಿ ವರ್ಗಾಯಿಸುತ್ತಾರೆ. ಅನಂತರ ಸಮಿತಿಯು ಸಂಬಂಧಿಸಿದ ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸುತ್ತದೆ. ಈ ಸಂಬಂಧ ಗಂಗಾ ಕಲ್ಯಾಣ ಯೋಜನೆಯ ವಿವರಗಳನ್ನು https://kmvstdcl.karnataka.gov.in/info-2/Ganga+Kalyana+Scheme/en ನಲ್ಲಿ ಪಡೆಯಬಹುದಾಗಿದೆ. ಅಲ್ಲದೇ ಹೆಚ್ಚಿನ ಮಾಹಿತಿಗಾಗಿ ಅರ್ಹರು +91 08022864720ಕ್ಕೆ ಸಂಪರ್ಕಿಸಬಹುದು.

ಏನಿದು ಗಂಗಾ ಕಲ್ಯಾಣ?


ಬೋರ್‌ವೆಲ್‌ ಕೊರೆಯುವ ಮೂಲಕ ಹಾಗೂ ತೆರೆದ ಬಾವಿ ತೋಡುವ ಮೂಲಕ ಕೃಷಿ ಭೂಮಿಗೆ ನೀರನ್ನು ಪೂರೈಸುವುದೇ ಗಂಗಾ ಕಲ್ಯಾಣ ಯೋಜನೆಯಾಗಿದೆ. ಅಲ್ಲದೇ ಈ ಯೋಜನೆಯಡಿ ವಿದ್ಯುತ್‌ ಸಂಪರ್ಕ ಕಲ್ಪಿಸಿ ಪಂಪ್‌-ಮೋಟಾರ್‌ ಅಳವಡಿಸುವುದಾಗಿದೆ.

ಎಲ್ಲೆಲ್ಲಿ ಅರ್ಜಿ? 
1. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
2. ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮ
3. ಪರಿಶಿಷ್ಟ ಜಾತಿ- ವರ್ಗಗಳ ಅಭಿವೃದ್ಧಿ ನಿಗಮ
4. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
5. ವಿಶ್ವಕರ್ಮ ಅಭಿವೃದ್ಧಿ ನಿಗಮ
6. ಉಪ್ಪಾರ ಅಭಿವೃದ್ಧಿ ನಿಗಮ
7. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ
8. ನಿಜಗುಣ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ

ಅರ್ಹರು ಯಾರ್ಯಾರು?
ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು.
ಪ್ರವರ್ಗ 1, 2ಎ, 3ಎ, 3ಬಿ ಹಿಂದುಳಿದ ವರ್ಗಕ್ಕೆ ಸೇರಿರಬೇಕು.
ಕನಿಷ್ಠ 1.20 ಎಕ್ರೆ ಗರಿಷ್ಠ 5 ಎಕ್ರೆ ಜಮೀನು ಹೊಂದಿರಬೇಕು.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಜಿಲ್ಲೆಯ ರೈತರಿಗೆ ಕನಿಷ್ಠ 1 ಎಕ್ರೆ ಇದ್ದರೆ ಸಾಕು
ಅರ್ಜಿದಾರ ಯಾವುದೇ ಕೇಂದ್ರ-ರಾಜ್ಯ ಸರಕಾರದ ಹುದ್ದೆಯಲ್ಲಿ ಇರಬಾರದು
ರಾಜ್ಯ ಖಾಯಂ ನಿವಾಸಿ ಆಗಿರಬೇಕು
ಅರ್ಜಿದಾರರು 18-55 ವರ್ಷಗಳ ನಡುವೆ ಇರಬೇಕು
9. ಬೋವಿ ಸಮುದಾಯದ ಅಭಿವೃದ್ಧಿ ನಿಗಮ

ವೈಯಕ್ತಿಕ ಬೋರ್‌ವೆಲ್‌ಗೆ‌ ಠೇವಣಿ
1. ನೋಂದಣಿ ಶುಲ್ಕ – 50 ರೂ. ಪ್ಲಸ್‌ ಶೇ.18 ಜಿಎಸ್‌ಟಿ
2. ಭದ್ರತಾ ಠೇವಣಿ ಶುಲ್ಕ- 1290 ರೂ., 1 ಎಚ್‌ಪಿಗೆ
3. ಮೀಟರ್‌ ಸುರಕ್ಷ ಠೇವಣಿ 3 ಸಾವಿರ ರೂ.,
4. ಮೀಟರ್‌ ಬಾಕ್ಸ್‌ 2100 ರೂ.
5. ಮೇಲ್ವಿಚಾರಣ ಶುಲ್ಕ 150 ಪ್ಲಸ್‌ ಶೇ.18 ಜಿಎಸ್‌ಟಿ

ಅರ್ಜಿ ಸಲ್ಲಿಕೆಗೆ ಸೆ.18 ಕೊನೇ ದಿನ
ಅಂತರ್ಜಲ ಕಡಿಮೆಯಾಗಿರುವ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಅನ್ವಯವಾಗುತ್ತದೆ. ಇತರ ಜಿಲ್ಲೆಗಳಿಗೆ 3 ಲಕ್ಷ ರೂ.ಗಳನ್ನು ನಿಗದಿಪಡಿಸಲಾಗಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಕೆಗೆ ಸೆ.18 ಕೊನೇ ದಿನವಾಗಿದ್ದು ಅರ್ಹ ರೈತರು https://kmvstdcl.karnataka.gov.ininfo-2/Ganga+ Kalyana+Scheme/en P ಕ್ಕೆ ಭೇಟಿ ನೀಡಬಹುದಾಗಿದೆ.

ಏನೇನು ಬೇಕು? 
ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಫ‌ಲಾನುಭವಿಗಳ ಭಾವಚಿತ್ರ, ಬ್ಯಾಂಕ್‌ ಪಾಸ್‌ ಬುಕ್‌, ಹೊಲದ ದಾಖಲೆ, ಜಾತಿ-ಆದಾಯ ಪ್ರಮಾಣ ಪತ್ರ, ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌, ಸ್ವಯಂ ಘೋಷಿತ ಪತ್ರ ಅವಶ್ಯ.


Gangakalyan-2023:ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ಬೋರ್ ವೆಲ್ ಕೊರೆಸಲು 4 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ

ಉದ್ದೇಶ:

ಗ್ರಾಮಾಂತರ ಕೃಷಿ ಕಾರ್ಮಿಕರು ಕಡಿಮೆ ಜಮೀನು ಹೊಂದಿರುವವರು ಮಳೆಯ ನೀರನ್ನು ಅವಲಂಬಿಸಿಕೊಂಡು ಕೃಷಿ ಮಾಡುವುದು ಕಷ್ಟಕರವಾಗಿರುತ್ತದೆ. ಅವರಿಗೆ ಕೊಳವೆ ಬಾವಿ ಅಥವಾ ತೆರೆದ ಬಾವಿ ತೆಗೆಸುವುದರಿಂದ ವಾಣಿಜ್ಯ ಫಸಲುಗಳನ್ನು ಬೆಳೆದು, ಜೀವನಮಟ್ಟವನ್ನು ಸುಧಾರಿಸಿಕೊಳ್ಳಲು ಅನುಕೂಲವಾಗುತ್ತದೆ.ಬೆಳಗಾವಿ, ಬಾಗಲಕೋಟೆ, ಬಿಜಾಪುರ ಮುಂತಾದ ಕಡೆಗಳಲ್ಲಿ ಸಮೀಪದಲ್ಲಿಯೇ ನದಿಗಳು ಹರಿಯುವುದರಿಂದ ತೆರೆದ ಬಾವಿಗಳಿಗೆ ಹೆಚ್ಚಿನ ಬೇಡಿಕೆ ಇದೆ.ಕೊಳವೆಬಾವಿಗಳಿ ಅವಶ್ಯವಿರುವಲ್ಲಿ ಕೊಳವೆಬಾವಿಗಳನ್ನು ಮತ್ತು ತೆರೆದಬಾವಿಗಳ ಅವಶ್ಯಕತೆ ಇರುವಲ್ಲಿ ತೆರೆದ ಬಾವಿಗಳಿಗೆ ಆರ್ಥಿಕ ಸೌಲಭ್ಯ ಒದಗಿಸಿದರೆ, ಕೃಷಿಕನ ಜೀವನ ಸುಧಾರಿಸುತ್ತದೆ.ಈ ಹಿನ್ನೆಲೆಯಲ್ಲಿ, ಈ ಯೋಜನೆಗೆ ನಿಗಮದ ಮೂಲಕ ಆರ್ಥಿಕ ಸಹಾಯವನ್ನು ನೀಡಲು ಉದ್ದೇಶಿಸಿದೆ.

ಸೌಲಭ್ಯ:


೧. ವೈಯಕ್ತಿಕ ನೀರಾವರಿ ಕೊಳವೆ ಬಾವಿ ಯೋಜನೆ: ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಫಲಾನುಭವಿಯು ಕನಿಷ್ಟ ಒಂದು (೦೧) ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಟ ಎರಡು (೦೨) ಎಕರೆ ಜಮೀನು ಇರಬೇಕು.
ಘಟಕ ವೆಚ್ಚ:ರೂ.೪,೦೦,೦೦೦/- ಗಳು,ಸಹಾಯಧನ : ರೂ.೩,೫೦,೦೦೦/-, ಸಾಲ ರೂ.೫೦,೦೦೦/- ಶೇ.೪ ರ ಬಡ್ಡಿ ದರ, ಮರುಪಾವತಿ ಅವಧಿ: ೩೬ ತಿಂಗಳು.

ಕೊರೆದ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಆರ್ ಆರ್ ಸಂಖ್ಯೆ ನೀಡಿದ ನಂತರ ವಿದ್ಯುತ್ ಸರಬರಾಜು ಕಂಪನಿಗಳಿಗೆ ವಿದ್ಯುದ್ದೀಕರಣ ವೆಚ್ಚವಾಗಿ ಪ್ರತಿ ಕೊಳವೆ ಬಾವಿಗೆ ರೂ.೫೦,೦೦೦/- ಗಳಂತೆ ಘಟಕ ವೆಚ್ಚದಲ್ಲಿ ಪಾವತಿಸಲಾಗುವುದು.

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ವೈಯಕ್ತಿಕ ಕೊಳವೆ ಬಾವಿಯ ಘಟಕ ವೆಚ್ಚ ರೂ.೪,೦೦,೦೦೦/- ಗಳು. ಇದರಲ್ಲಿ ರೂ.೩,೫೦,೦೦೦/- ಗಳ ಸಹಾಯಧನ ಹಾಗೂ ರೂ.೫೦,೦೦೦/- ಗಳ ಸಾಲ ಪಡೆಯಲು ಅವಕಾಶವಿರುತ್ತದೆ.

೨. ಸಾಮೂಹಿಕ ನೀರಾವರಿ ಕೊಳವೆಬಾವಿ ಯೋಜನೆ: ಒಕ್ಕಲಿ ಸಮುದಾಯಕ್ಕೆ ಸೇರಿದ ಸಣ್ಣ ಮತ್ತು ಅತೀ ಸಣ್ಣ ರೈತರು ಹೊಂದಿರುವ ೦೮ ಎಕರೆ ಮತ್ತು ಅದಕ್ಕಿಂತ ಹೆಚ್ಚಿನ ಜಮೀನಿಗೆ ಸಾಮೂಹಿಕ ನೀರಾವರಿ ಸೌಲಭ್ಯ.

ಘಟಕ ವೆಚ್ಚ: ೮-೧೫ ಎಕರೆ ಜಮೀನಿಗೆ ರೂ.೬,೦೦,೦೦೦/- ಗಳ ವೆಚ್ಚದಲ್ಲಿ ಎರಡು ಕೊಳವೆಬಾವಿ ಹಾಗೂ ೧೫ ಎಕರೆಗಿಂತ ಹೆಚ್ಚು ಜಮೀನು ಒಳಪಡುವ ಘಟಕಗಳಿಗೆ ನಿಗಧಿತ ಘಟಕ ವೆಚ್ಚ ರೂ.೮,೦೦,೦೦೦/- ಗಳ ವೆಚ್ಚದಲ್ಲಿ ೦೩ ಕೊಳವೆಬಾವಿಗಳನ್ನು ಕೊರೆಯಿಸಿ ಪಂಪ್ ಸೆಟ್ ಮತ್ತು ಉಪಕರಣಗಳನ್ನು ಸರಬರಾಜು ಮಾಡುವುದು ಹಾಗೂ ವಿದ್ಯುದ್ದೀಕರಣಕ್ಕೆ ಠೇವಣಿ ಪಾವತಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸುವುದು. ಇದು ಪೂರ್ಣ ಅನುದಾನವಾಗಿರುತ್ತದೆ.

೩. ತೆರೆದ ಬಾವಿ: ವೈಯಕ್ತಿಕ ನೀರಾವರಿ ಕೊಳವೆ ಬಾವಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಮಲೆನಾಡು ಪ್ರದೇಶದ ಜಿಲ್ಲೆ ತೆರೆದಬಾವಿ ನೀರಾವರಿ ಸೌಲಭ್ಯ ಒದಗಿಸಲು ಅವಕಾಶವಿರುತ್ತದೆ.

೪. ಸಾಮೂಹಿಕ ಏತ ನೀರಾವರಿ ಯೋಜನೆ:ಭೂಮಟ್ಟದಲ್ಲಿ ಶಾಶ್ವತವಾಗಿ ದೊರೆಯುವ ಜಲ ಸಂಪನ್ಮೂಲಗಳಾದ ನದಿ. ಕೆರೆ, ಹಳ್ಳ ಇವುಗಳಿಗೆ ಮೋಟಾರು ಅಳವಡಿಸಿ, ಪೈಪ್‌ಲೈನ್ ಮೂಲಕ ಖುಷ್ಕಿ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು.


ಘಟಕ ವೆಚ್ಚ: ಸಾಮೂಹಿಕ ನೀರಾವರಿ ಕೊಳವೆ ಬಾವಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಈ ಸೌಲಭ್ಯ ಒದಗಿಸಲಾಗುವುದು.

೫. ಕರ್ನಾಟಕ ಅಂರ್ತಜಲ ಅಧಿನಿಯಮದನ್ವಯ ಈ ಕೆಳಕಂಡ ೪೩ ತಾಲ್ಲೂಕುಗಳಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಕೊಳವೆ ಬಾವಿ ಕೊರೆಯುವ ಮುನ್ನ ಅಂರ್ತಜಲ ಪ್ರಾಧಿಕಾರದಿಂದ ಅನುಮತಿ ಪಡೆಯತಕ್ಕದ್ದು. ಅನುಮತಿ ಪಡೆದಂತಹ ಫಲಾನುಭವಿಗಳ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆಯಲು ಕ್ರಮವಹಿಸಲಾಗುವುದು.

ಈ ಮೇಲ್ಕಂಡ ಯೋಜನೆಗಳ ಅನುಷ್ಟಾನಕ್ಕಾಗಿ ಮಾರ್ಗಸೂಚಿಗಳು ಈ ಕೆಳಕಂಡಂತಿವೆ:


೧. ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ ರೂ.೯೮,೦೦೦/- ಗಳ ಮಿತಿಯಲ್ಲಿರಬೇಕು.
೨. ಅರ್ಜಿದಾರರ ವಯಸ್ಸು ೧೮-೫೫ ವರ್ಷದೊಳಗಿರಬೇಕು.
೩. ಕರ್ನಾಟಕ ರಾಜ್ಯ ಖಾಯಂ ನಿವಾಸಿಯಾಗಿರಬೇಕು- ಕನಿಷ್ಟ ೧೦ ವರ್ಷ.
೪. ಈ ಹಿಂದೆ ಸರ್ಕಾರದ / ನಿಗಮಗಳ ಯೋಜನೆಗಳಲ್ಲಿ ಸೌಲಭ್ಯ ಪಡೆದಿರಬಾರದು.
೫. ಮೂರು ವರ್ಷಗಳ ಒಳಗಾಗಿ ಸಾಲ ಮತ್ತು ಬಡ್ಡಿಯನ್ನು ಚುಕ್ತಾ ಮಾಡುವುದು.
೬. ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
೭. ಅರ್ಜಿದಾರರು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಉಳಿತಾಯ ಖಾತೆ ಹೊಂದಿರಬೇಕು.
೮. ಈ ಯೋಜನೆಯ ಅಡಿಯಲ್ಲಿ ಕೈಗೊಳ್ಳುವ ಚಟುವಟಿಕೆಯ ಬಗ್ಗೆ ತರಬೇತಿ / ಅನುಭವ / ತಿಳುವಳಿಕೆ ಹೊಂದಿರಬೇಕು.
೯. ನಿಗಮದ ಮಂಡಳಿ ಸಭೆಯ ವಿವೇಚನಾ ಕೋಟಾದಡಿಯಲ್ಲಿ ಶೇ.೧೦ ರಷ್ಟು ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
೧೦. ಫಲಾನುಭವಿಗಳ ಆಯ್ಕೆಯನ್ನು ಸಂಬಂಧಿಸಿದ ಶಾಸಕರ ಅಧ್ಯಕ್ಷತೆಯ ಸಮಿತಿಯ ಮೂಲಕ ಮಾಡಲಾಗುವುದು.

]]>
Sat, 07 Jun 2025 20:03:32 +0530 shivuagrico
Monsoon&ರಾಜ್ಯದಲ್ಲಿ ಸದ್ಯಕ್ಕೆ ಮುಂಗಾರು ದುರ್ಬಲ,ಇನ್ನೆಷ್ಟು ದಿನ ಮಳೆ ಇಲ್ಲ? https://krushirushi.in/Monsoon-2149 https://krushirushi.in/Monsoon-2149 Monsoon-ರಾಜ್ಯದಲ್ಲಿ ಸದ್ಯಕ್ಕೆ ಮುಂಗಾರು ದುರ್ಬಲ,ಇನ್ನೆಷ್ಟು ದಿನ ಮಳೆ ಇಲ್ಲ?

ರಾಜ್ಯದಲ್ಲಿ ಪ್ರಸ್ತುತ ಮುಂಗಾರು(Monsoon) ಮಾರುತಗಳು ನಿರೀಕ್ಷಿತ ಮಟ್ಟದಲ್ಲಿ ಸಕ್ರಿಯವಾಗಿಲ್ಲ. ಸದ್ಯಕ್ಕೆ ಮುಂಗಾರು ದುರ್ಬಲಗೊಂಡಿದ್ದು, ಇನ್ನಷ್ಟು ದಿನ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂಗಾರಿನ ಆರಂಭದಲ್ಲಿ ಉತ್ತಮ ಮಳೆ ಕಂಡಿದ್ದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜೂನ್ 6 ರಿಂದ ಜೂನ್ 12 ರವರೆಗೆ ಹೆಚ್ಚಾಗಿ ಬಿಸಿಲಿನ ವಾತಾವರಣ ಇರಲಿದೆ.

ಇನ್ನು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಮುಂದಿನ ಐದು ದಿನಗಳ ಕಾಲ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಈ ಪ್ರದೇಶಗಳಲ್ಲೂ ಭಾಗಶಃ ಮೋಡ ಕವಿದ ವಾತಾವರಣದ ಜೊತೆಗೆ ಶುಭ್ರ ಆಕಾಶವೂ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆ ಕ್ಷೀಣಿಸಿದ ಕಾರಣ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ಉತ್ತರ ಕರ್ನಾಟಕದಲ್ಲಿ 33ರಿಂದ 37 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಕರ್ನಾಟಕದಲ್ಲಿ 30ರಿಂದ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಸದ್ಯಕ್ಕೆ ಮುಂಗಾರು ಬಲಗೊಳ್ಳಲು ಪೂರಕವಾದ ವಾತಾವರಣವಿಲ್ಲ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಮಾರುತಗಳು ಪ್ರಬಲಗೊಳ್ಳಲು ಸ್ವಲ್ಪ ಸಮಯ ಬೇಕಾಗುತ್ತದೆ, ಹಾಗಾಗಿ ಸದ್ಯಕ್ಕೆ ರಾಜ್ಯದ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗಲಿದೆ. ಸಾರ್ವಜನಿಕರು ಹವಾಮಾನ ವೈಪರೀತ್ಯಗಳಿಗೆ ಸಿದ್ಧರಾಗಿರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ದಿನದಲ್ಲಿ 2, 3 ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಕಡಲ ತೀರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 4ರಂದು ಉತ್ತರ ಕನ್ನಡ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಒಂದೆರಡು ಮಳೆಯ ಮುನ್ಸೂಚೆನೆ ಇದೆ. ಜೂನ್ 5ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು. ಜೂನ್ 10 ಅಥವಾ 11ರಿಂದ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಇದರ ಮಧ್ಯೆ ಒಂದೆರಡು ದಿನ ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಜೂನ್ 5ರಿಂದ ಹೆಚ್ಚಿನ ಅವಧಿ ಬಿಸಿಲು ಇದ್ದರೂ 6 ಮತ್ತು 7ರಂದು ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾಗಬಹುದು.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಉತ್ತರ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯಲಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಜೂನ್ 4 ಹಾಗೂ 7ರಂದು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಜೂನ್ 11ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡು ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

 

]]>
Sat, 07 Jun 2025 06:16:23 +0530 shivuagrico
Fertiliser calculator&ನಿಮ್ಮ ಬೆಳೆಗೆ ಎಷ್ಟು ಗೊಬ್ಬರ ಹಾಕಬೇಕು? ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ https://krushirushi.in/Fertiliser-calculator-2144 https://krushirushi.in/Fertiliser-calculator-2144 Fertiliser calculator-ನಿಮ್ಮ ಬೆಳೆಗೆ ಎಷ್ಟು ಗೊಬ್ಬರ ಹಾಕಬೇಕು? ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ 

https://youtu.be/4LtdZMiUqEU 

ನಂತರ ಈ ಕೆಳಗಿನ ಮತ್ತೊಂದು ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.easy.fertilizer.calculator

ನಂತರ ಈ ಕೆಳಗಿನ Fertiliser calculators ಅಪ್ಲಿಕೇಷನ್ ಡೌನ್ಲೋಡ್ ಮಾಡಿ

ನಂತರ ನಿಮ್ಮ ಬಾಷೆಯನ್ನು Select ಮಾಡಿ

ನಿಮ್ಮ ಗೊಬ್ಬರದ ಚೀಲದ ಮೇಲೆ N:P:K ಕೆಳಗಡೆ ಗೊಬ್ಬರದಲ್ಲಿರುವ NPK ಪ್ರಮಾಣವನ್ನು ಬರೆದಿರುತ್ತಾರೆ, ಆದರೆ ಎಕರೆಗೆ ಎಷ್ಟು kg ಗೊಬ್ಬರ ಹಾಕಬೇಕು ಎಂದು ತಿಳಿಯಲು NPK ಪ್ರಮಾಣವನ್ನು ನಮೂದಿಸಿ. ಉದಾಹರಣೆಗೆ ಯೂರಿಯಾ ಗೊಬ್ಬರದಲ್ಲಿ 46% ಸಾರಜನಕ ಇರುತ್ತದೆ. ಅದಕ್ಕಾಗಿ N ಮುಂದೆ 46 ಹಾಗೂ P ಮತ್ತು K ಮುಂದೆ "0" ಎಂದು ಹಾಕಿ calculate ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಎಕರೆ ಅಥವಾ ಹೆಕ್ಟೇರ್ Select ಮಾಡಿದರೆ, ಎಕರೆಗೆ 100kg urea ಗೊಬ್ಬರವನ್ನು ಹಾಕಬೇಕು ಎಂದು ತೋರಿಸುತ್ತದೆ.

ಅದೇ ರೀತಿ ಔಷದಿ ಪ್ರಮಾಣವನ್ನು ಸಹ calculate ಮಾಡಬಹುದು.

ಅದೇ ರೀತಿ ಬಿತ್ತನೆ ಬೀಜದ ಪ್ರಮಾಣ ಹಾಗೂ ನಾಟಿ ಮಾಡಬಹುದಾದ ಸಸಿಗಳ ಸಂಖ್ಯೆಯನ್ನು ಸಹ ಲೆಕ್ಕ ಮಾಡಬಹುದು

ಏನೀದು Fertliser calculator ಅಪ್ಲೀಕೇಷನ್?

ಬೆಳೆಗಳಿಗೆ ಎಷ್ಟು ಪ್ರಮಾಣದ ಗೊಬ್ಬರ ಹಾಕಬೇಕು? ಸಾರಜನಕ, ರಂಜಕ ಮತ್ತು ಪೊಟ್ಯಾಷ್‌ ಪ್ರಮಾಣ ಎಷ್ಟಿರಬೇಕು? ಈ ತಿಳಿವಳಿಕೆ ಹಲವು ರೈತರಲ್ಲಿ ಇರುವುದಿಲ್ಲ. ಬೆಳೆ ಸರಿಯಾಗಿ ಬರದಿರಲು ಇದೂ ಒಂದು ಪ್ರಮುಖ ಕಾರಣ. ಕೋಲಾರ ಮೂಲದ ಕೃಷಿ ತಜ್ಞರೊಬ್ಬರು ಅಭಿವೃದ್ಧಿಪಡಿಸಿರುವ ''ಫಾರ್ಮ್‌ ಕ್ಯಾಲ್ಕುಲೇಟರ್‌'' ಆ್ಯಪ್‌ ಈ ಸಮಸ್ಯೆ ನಿವಾರಣೆಗೆ ನೆರವಾಗುತ್ತದೆ. ರೈತರಷ್ಟೇ ಅಲ್ಲದೇ, ಕೃಷಿ ಅಧಿಕಾರಿಗಳು ಹಾಗೂ ಗೊಬ್ಬರದಂಗಡಿಯವರಿಗೂ ಇದು ಸಹಾಯಕ. 


ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ (ಜಿಕೆವಿಕೆ) ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿರುವ ವಿಶ್ವನಾಥ ಕೋಟಿ ಅವರು ಅಭಿವೃದ್ಧಿಪಡಿಸಿರುವ ಈ ಆ್ಯಪ್‌ಅನ್ನು ಈವರೆಗೆ 96 ಸಾವಿರ ಜನ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. 2015ರಲ್ಲಿ ''ಫರ್ಟಿಲೈಸರ್‌ ಕ್ಯಾಲ್ಕುಲೇಟರ್‌'' ಹೆಸರಿನಲ್ಲಿ ಅಭಿವೃದ್ಧಿ ಪಡಿಸಿದ್ದ ಈ ಆ್ಯಪ್‌ ಅನ್ನು ಸುಧಾರಣೆ ಮಾಡಿ, ಎಂಟು ತಿಂಗಳ ಹಿಂದಷ್ಟೇ ''ಫಾರ್ಮ್‌ ಕ್ಯಾಲ್ಕುಲೇಟರ್‌'' ಎಂದು ಪುನರ್‌ ನಾಮಕರಣ ಮಾಡಿದ್ದಾರೆ. ಆಫ್‌ಲೈನ್‌ನಲ್ಲೂ ಕೆಲಸ ಮಾಡುವುದು ಇದರ ವಿಶೇಷ.


ವಿಶ್ವನಾಥ್‌ ಅವರು 2015ರಲ್ಲಿ ಮಂಡ್ಯದ ಕೃಷಿ ಸಂಶೋಧನಾ ಕೇಂದ್ರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು. ಬೆಳೆಗೆ ಯಾವ ಪ್ರಮಾಣದ ಗೊಬ್ಬರ ಹಾಕಬೇಕು? ಯಾವಾದ ಯಾವ ಪೋಷಕಾಂಶ ನೀಡಬೇಕು ಎಂದು ಎಲ್ಲ ರೈತರೂ ಪ್ರಶ್ನಿಸುತ್ತಿದ್ದರು. ಗೊಬ್ಬರ ಬಳಕೆ ಲೆಕ್ಕಾಚಾರಕ್ಕೆ ಆ್ಯಪ್‌ ಅಭಿವೃದ್ಧಿಪಡಿಸುವ ವಿಚಾರ ಆವಾಗ ಅವರಿಗೆ ಬಂತು.
ಸಾರಜನಕ, ರಂಜಕ ಮತ್ತು ಪೊಟ್ಯಾಶಿಯಂನ ಸಂಯೋಜನೆಗಳನ್ನು ಒಳಗೊಂಡ ಒಂದು ಕೋಷ್ಟಕ ತಯಾರಿಸಿಕೊಂಡು ಬೆಂಗಳೂರಿಗೆ ಹೊರಟರು. ಈ ಕೋಷ್ಟಕಗಳಲ್ಲಿರುವ ದತ್ತಾಂಶಗಳನ್ನು ಡೆವಲಪರ್‌ವೊಬ್ಬರು ಆ್ಯಪ್‌ ರೂಪಕ್ಕೆ ತಂದರು. ಕೆಲವೇ ತಿಂಗಳುಗಳಲ್ಲಿ ಈ ಆ್ಯಪ್‌ ಜನಪ್ರಿಯತೆ ಗಳಿಸಿತು. ವಿಶ್ವನಾಥ್‌ ಅವರ ಫಾರ್ಮ್‌ ಕ್ಯಾಲ್ಕುಲೇಟರ್‌ ಆ್ಯಪ್‌ಗೆ ಗೂಗಲ್‌ ಪ್ಲೇಸ್ಟೋರ್‌ನಲ್ಲಿ 4.3 ರೇಟಿಂಗ್‌ ಲಭ್ಯವಾಗಿದೆ. ವಾಟ್ಸ್‌ಆ್ಯಪ್‌ನಲ್ಲಿ ಗ್ರುಪ್‌ ರಚಿಸಿಕೊಂಡು ಈ ಆ್ಯಪ್‌ ಬಗ್ಗೆ ಅವರು ಇನ್ನಷ್ಟು ಜಾಗೃತಿ ಮೂಡಿಸುತ್ತಿದ್ದಾರೆ.


ಗೊಬ್ಬರ ಲೆಕ್ಕಾಚಾರ: ಸಾರಜನಕ, ರಂಜಕ ಮತ್ತು ಪೊಟ್ಯಾಶಿಯಂ ಬೆರೆಸುವ ಪ್ರಮಾಣದಲ್ಲಿ ಒಂದಿಷ್ಟು ವ್ಯತ್ಯಾಸವಾದರೂ ಅದು ಬೆಳೆಯ ಮೇಲೆ ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ಗೊಬ್ಬರದ ಅಂಗಡಿಯವರು ಜಾಗರೂಕರಾಗಿ ಲೆಕ್ಕ ಹಾಕಿ ಮೂರು ಪೋಶಕಾಂಶವನ್ನು ಹೊಂದಾಣಿಕೆ ಮಾಡುತ್ತಾರೆ. ಮಾರುಕಟ್ಟೆಯಲ್ಲಿ ಸಾರಜನಕ, ರಂಜಕ, ಪೊಟ್ಯಾಶಿಯಂ ಸಂಯೋಜಿತ 14 ಗೊಬ್ಬರಗಳು ರೆಡಿಮೇಡ್‌ ರೂಪದಲ್ಲಿ ಸಿಗುತ್ತವೆ. ಅದನ್ನು ಹೊರತುಪಡಿಸಿ ಕೆಲವು ಸಮಯಗಳಲ್ಲಿ ಹೊಸ ಸಂಯೋಜನೆಗಳು ಬೇಕಾಗುತ್ತವೆ. ಆಗ ಈ ಆ್ಯಪ್‌ ಬಳಕೆಗೆ ಬರುತ್ತದೆ.


ಇನ್ನಷ್ಟು ಫೀಚರ್‌ ಸೇರಿಸುವ ಆಕಾಂಕ್ಷೆ : ವಿಶ್ವನಾಥ್‌ ಅವರಿಗೆ ತಮ್ಮ ಆ್ಯಪ್‌ನಲ್ಲಿ ಇನ್ನಷ್ಟು ಫೀಚರ್‌ಗಳನ್ನು ಸೇರಿಸುವ ಹಂಬಲವಿದೆ. ಮಣ್ಣು ಪರೀಕ್ಷೆ ನಂತರ ಗೊಬ್ಬರವನ್ನು ಯಾವ ಪ್ರಮಾಣದಲ್ಲಿ ಸೇರಿಸಬೇಕು. ಭತ್ತ ಎಂದು ಟೈಪ್‌ ಮಾಡಿದ ಕೂಡಲೇ ಯಾವ್ಯಾವ ತಳಿಗೆ ಎಷ್ಟು ಗೊಬ್ಬರ ಹಾಕಬೇಕೆಂಬ ಫಲಿತಾಂಶ ಸಿಗಬೇಕೆಂಬ ಕನಸು ಅವರಿಗಿದೆ. ಇದನ್ನು ಕೋಷ್ಟಕ ರೂಪದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದಾರೆ. ಎಲ್ಲ ಅಂದುಕೊಂಡಂತೆ ಆದರೆ ಮುಂದಿನ ವರ್ಷ ಹೊಸ ಫೀಚರ್‌ಗಳು ಸೇರಿಕೊಳ್ಳಲಿವೆ.

 
ಆ್ಯಪ್‌ನಲ್ಲಿ ಏನೇನಿದೆ?: ಗೊಬ್ಬರ ಲೆಕ್ಕಾಚಾರ ಈ ಆ್ಯಪ್‌ನ ಪ್ರಮುಖ ಫೀಚರ್‌. ಅದನ್ನು ಹೊರತುಪಡಿಸಿ ಇನ್ನೂ ಮೂರು ಕ್ಯಾಲ್ಕುಲೇಟರ್‌ ಅನ್ನು ಈ ಆ್ಯಪ್‌ ಒಳಗೊಂಡಿದೆ. ಕ್ರಿಮಿನಾಶಕ, ಶಿಲೀಂದ್ರ ನಾಶಕಗಳನ್ನು ಎಷ್ಟು ಎಕರೆಗೆ, ಎಷ್ಟು ಲೀಟರ್‌ ನೀರಿಗೆ ಹಾಗೂ ಯಾವ ಪ್ರಮಾಣದಲ್ಲಿ ಬೆರೆಸಬೇಕು ಎಂಬುದನ್ನು ಇಲ್ಲಿ ಲೆಕ್ಕ ಹಾಕಬಹುದು. ಇರುವ ಸಸಿಗಳೆಷ್ಟು? ಎಷ್ಟು ಎಕರೆ ಜಾಗದಲ್ಲಿ ನೆಡಬೇಕು? ಸಸಿಗಳ ನಡುವೆ ಎಷ್ಟು ಅಂತರವಿರಬೇಕು ಎಂಬುದನ್ನು ದಾಖಲಿಸಿದರೆ ಇಂತಿಷ್ಟು ಪ್ರದೇಶದಲ್ಲಿ ವ್ಯವಸಾಯ ಮಾಡಲು ಇಷ್ಟೇ ಸಸಿಗಳ ಅಗತ್ಯ ಇದೆ ಎಂಬುದನ್ನು ಈ ಆ್ಯಪ್‌ ತೋರುತ್ತದೆ. ಅದೇ ರೀತಿ ನೂರು ಗ್ರಾಂ ಪೊಟ್ಟಣದಲ್ಲಿ ಎಷ್ಟು ಬೀಜಗಳಿರುತ್ತದೆ ಎಂಬುದನ್ನು ದಾಖಲಿಸಿದರೆ ಇಂತಿಷ್ಟು ಎಕರೆಗೆ ಇಷ್ಟೇ ಬಿತ್ತನೆ ಬೀಜ ಬೇಕು ಎಂಬುದನ್ನೂ ಫಲಿತಾಂಶದಲ್ಲಿ ನೋಡಬಹುದು.


ಬಹು ಭಾಷೆಗಳಲ್ಲಿ ಲಭ್ಯ: ಫರ್ಟಿಲೈಸರ್‌ ಕ್ಯಾಲ್ಕುಲೇಟರ್‌ ಆ್ಯಪ್‌ ಜನಪ್ರಿಯತೆ ಗಳಿಸಿದ ಬಳಿಕ ಅದನ್ನು ಇನ್ನಷ್ಟು ಭಾಷೆಗಳಿಗೆ ಅಳವಡಿಸಲು ವಿಶ್ವನಾಥ್‌ ಚಿಂತಿಸಿದರು. ಗೂಗಲ್‌ ಟ್ರಾನ್ಸ್‌ಲೇಟರ್‌ ಪ್ಲಗ್‌ ಇನ್‌ ಅಳವಡಿಸುವ ಮೂಲಕ ಆ್ಯಪ್‌ಅನ್ನು ಹಿಂದಿ, ತಮಿಳು, ತೆಲುಗು, ಮಲಯಾಳಂ, ಮರಾಠಿಗೆ ವಿಸ್ತರಿಸಿದರು. ಭಾಷೆಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಲ್ಲೂ ಈ ಆ್ಯಪ್‌ ಬಳಕೆ ಹೆಚ್ಚಾಯಿತು. ಮೊದಲಿನಿಂದಲೂ ಇಂಗ್ಲಿಷ್‌ ಭಾಷೆಯಲ್ಲಿ ಇದ್ದ ಕಾರಣ ವಿದೇಶಗಳಲ್ಲೂ ಈ ಆ್ಯಪ್‌ ಡೌನ್‌ಲೋಡ್‌ ಆಗುತ್ತಿವೆ.
ಆಸಕ್ತರು ವಿಶ್ವನಾಥ ಕೋಠಿ ಅವರ ಮೊಬೈಲ್‌ ನಂ. 9108925969 ಸಂಪರ್ಕಿಸಬಹುದು.

]]>
Fri, 06 Jun 2025 12:34:34 +0530 shivuagrico
ಆಧಾರ್ ಲಿಂಕ್ ಆದ ರೈತರಿಗೆ ಬೆಳೆಹಾನಿ ಪರಿಹಾರ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿ&Aadhaar not linked croploss farmers list https://krushirushi.in/Aadhaar-not-linked-croploss-farmers-list-2148 https://krushirushi.in/Aadhaar-not-linked-croploss-farmers-list-2148 ಆಧಾರ್ ಲಿಂಕ್ ಆದ ರೈತರಿಗೆ ಬೆಳೆಹಾನಿ ಪರಿಹಾರ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿ-Aadhaar not linked croploss farmers list

ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/AadharNotSeededReport.aspx

ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ

]]>
Fri, 06 Jun 2025 06:14:34 +0530 shivuagrico
ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ&Free sewing machine scheme https://krushirushi.in/Free-sewing-machine-2146 https://krushirushi.in/Free-sewing-machine-2146 ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Free sewing machine scheme Uchitha holige yantra

ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ನಿಯಮಿತದಿಂದ ಉಚಿತ ಹೊಲಿಗೆ ಯಂತ್ರವನ್ನು(Free sewing machine/uchitha holige yantra) ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ವರ್ಷ ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿ ಫಲಾನುಭವಿಗಳಿಗೆ ವಿವಿಧ ವಲಯಗಳಲ್ಲಿ ಸ್ವ-ಉದ್ಯೋಗ ಮಾಡಲು ಅರ್ಥಿಕವಾಗಿ ನೆರವು ನೀಡಲು ರಾಜ್ಯದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ವಿವಿಧ ನಿಗಮಗಳಿಂದ ಉಚಿತವಾಗಿ ಹೊಲಿಗೆ ಯಂತ್ರವನ್ನು (Free sewing machine scheme) ನೀಡಲು ಅರ್ಜಿ ಆಹ್ವಾನಿಸಲಾಗುತ್ತಿದ್ದು ಇದರಂತೆ ಈ ವರ್ಷವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.

1) ಹಿಂದುಳಿದ ವರ್ಗಗಳ ಬಡ ಕುಟುಂಬದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಡಿಯಲ್ಲಿ ಪ್ರಯೋಜನವನ್ನು ಪಡೆಯಲು ಅರ್ಜಿ ಸಲ್ಲಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದವರಾಗಿರಬೇಕು. 

2) ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪುದೇಶದವರಿಗೆ ರೂ.1,20,000/-ಗಳ ಒಳಗಿರಬೇಕು, 

3) ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಉಚಿತ ಹೋಲಿಗೆ ಯಂತ್ರ ಪಡೆಯಲು 31 ಆಗಸ್ಟ್ 2024ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.


ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು

ಅರ್ಜಿ ಸಲ್ಲಿಸುವುದು ಹೇಗೆ? How to apply for free sewing machine application online)

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ 

https://sevasindhu.karnataka.gov.in/

ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಮೂಲಕ ಅರ್ಜಿ ಸಲ್ಲಿಸಿ

]]>
Thu, 05 Jun 2025 22:40:27 +0530 shivuagrico
Crop insurance company&ನಿಮ್ಮ ಜಿಲ್ಲೆಗೆ ಈ ವರ್ಷ ಯಾವ ಬೆಳೆವಿಮೆ ಕಂಪನಿ ಇದೆ? ಹೀಗೆ ಚೆಕ್ ಮಾಡಿ https://krushirushi.in/Crop-insurance-company-2145 https://krushirushi.in/Crop-insurance-company-2145 Crop insurance company-ನಿಮ್ಮ ಜಿಲ್ಲೆಗೆ ಈ ವರ್ಷ ಯಾವ ಬೆಳೆವಿಮೆ ಕಂಪನಿ ಇದೆ? ಹೀಗೆ ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2025-26" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Know your insurance Co." ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಯಾವ ಜಿಲ್ಲೆಗೆ ಯಾವ ಕಂಪನಿ select ಆಗಿದೆ ಎಂದು ತೋರಿಸುತ್ತದೆ. ನಿಮ್ಮ ಜಿಲ್ಲೆಗೆ ಯಾವ ಕಂಪನಿ ಎಂದು ತಿಳಿಯಲು ನಿಮ್ಮ ಜಿಲ್ಲೆ select ಮಾಡಿ

ಈ ಕೆಳಗಿನಂತೆ ನಿಮ್ಮ ಜಿಲ್ಲೆಗೆ ಯಾವ ಕಂಪನಿ select ಆಗಿದೆ ಎಂದು ತಿಳಿಯಲಿದೆ.



Crop you can insure-ಮುಂಗಾರಿನ ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಬೇಕು? ಚೆಕ್ ಮಾಡಿಕೊಂಡು ಬೆಳೆವಿಮೆ ಕಟ್ಟಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ


Farmer ಕಾಲಂನಲ್ಲಿ "
Crop you can insure" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ selet ಮಾಡಿ Display ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಯಾವ ಬೆಳೆಗೆ ಎಷ್ಟು ಬೆಳೆವಿಮೆ(crop insurance) ಸಿಗಲಿದೆ ಎಂಬ ಮಾಹಿತಿ ದೊರೆಯಲಿದೆ.



Belevime last date 2024-ಮುಂಗಾರು ಬೆಳೆವಿಮೆ ನೊಂದಣೆ ಪ್ರಾರಂಭ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ

ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ

]]>
Thu, 05 Jun 2025 20:35:19 +0530 shivuagrico
ಈ ಬೆಳೆಗಳಿಗೆ ಬೆಳೆವಿಮೆ ಕಟ್ಟಲು ಕೊನೆಯ ದಿನಾಂಕ,ವಿಸ್ತರಣೆ ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ&Belevime last date   https://krushirushi.in/Belevime-last-date-2143 https://krushirushi.in/Belevime-last-date-2143 ಈ ಬೆಳೆಗಳಿಗೆ ಬೆಳೆವಿಮೆ ಕಟ್ಟಲು ಕೊನೆಯ ದಿನಾಂಕ,ವಿಸ್ತರಣೆ ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ-Belevime last date  

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2025-26" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ

ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ

]]>
Thu, 05 Jun 2025 07:47:16 +0530 shivuagrico
Crop loss compensation&ಮಳೆಯಿಂದಾದ ಬೆಳೆಹಾನಿಗೆ ಪರಿಹಾರ ಪಡೆಯುವುದು ಹೇಗೆ? https://krushirushi.in/Crop-loss-compensation-2142 https://krushirushi.in/Crop-loss-compensation-2142 Crop loss compensation-ಮಳೆಯಿಂದಾದ ಬೆಳೆಹಾನಿಗೆ ಪರಿಹಾರ ಪಡೆಯುವುದು ಹೇಗೆ?

ಈ ಬಾರಿ ಮುಂಗಾರು ಆಗಮನ ವಾಡಿಕೆಗಿಂತ ಬೇಗನೆ ಆಗಮಿಸಿದ ಕಾರಣ ಮೇ ಅಂತ್ಯದ ವೇಳೆಗೆ ಕರ್ನಾಟಕ ಸೇರಿ ಭಾರತದಾದ್ಯಂತ ಭರ್ಜರಿ ಮಳೆಯಾಗುತ್ತಿದೆ. ಆದರೆ ಜೂನ್‌ ಮೊದಲ ವಾರದಲ್ಲಿ ಕೊಂಚ ಮಳೆ ಪ್ರಮಾಣ ಕಡಿಮೆಯಾದರೂ ಸಹ ಕರ್ನಾಟಕದಲ್ಲಿ ಜೂನ್‌ 8ರಿಂದ ಮಳೆ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.


ಇನ್ನು, ಪ್ರತಿ ವರ್ಷವೂ ದೇಶದ ಹಲವು ರಾಜ್ಯಗಳಲ್ಲಿ ಮಳೆ ಮತ್ತು ಪ್ರವಾಹದಿಂದ ಮಾನ್ಸೂನ್ ಹಾನಿಯನ್ನು ಉಂಟು ಮಾಡುತ್ತದೆ. ಉತ್ತರ ಪ್ರದೇಶ, ಬಿಹಾರದಿಂದ ಈಶಾನ್ಯ ಭಾರತದ ರಾಜ್ಯಗಳವರೆಗೆ ಅನೇಕ ಪ್ರದೇಶಗಳಲ್ಲಿ ಜನರು ಮನೆ ಮತ್ತು ಕೃಷಿ ಬೆಳೆಯನ್ನೂ ಕಳೆದುಕೊಂಡಿದ್ದಾರೆ. ಆದರೆ ಅಂತಹ ವಿಪತ್ತಿನಲ್ಲಿ, ಸರ್ಕಾರವು ಮನೆ ಮತ್ತು ಬೆಳೆ ಕಳೆದುಕೊಂಡವರಿಗೆ ಆರ್ಥಿಕ ಸಹಾಯವನ್ನು ಸಹ ನೀಡುತ್ತದೆ. ನಷ್ಟವನ್ನು ಸರಿದೂಗಿಸಲು ಪರಿಹಾರವನ್ನು ಹೇಗೆ ಪಡೆಯುವುದು ಎಂದು ನೀವು ಮೊದಲು ಸರಿಯಾಗಿ ತಿಳಿದುಕೊಳ್ಳಬೇಕು.

ಆಡಳಿತವು ಹಾನಿ ಸಮೀಕ್ಷೆ ನಡೆಸುತ್ತೆ:

ಸ್ಥಳೀಯ ಆಡಳಿತವು ಮೊದಲು ನೈಸರ್ಗಿಕ ವಿಕೋಪ ಅಥವಾ ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಮೌಲ್ಯಮಾಪನ ಮಾಡುತ್ತದೆ. ಹಾನಿ ತುಂಬಾ ಹೆಚ್ಚಾದಾಗ, ರಾಜ್ಯ ಸರ್ಕಾರ ಪರಿಹಾರ ನಿಧಿ ಅಥವಾ ಪರಿಹಾರವನ್ನು ಘೋಷಿಸುತ್ತದೆ. ಇದಕ್ಕಾಗಿ, ಅಧಿಕಾರಿಗಳು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ವರದಿಯನ್ನು ಸಿದ್ಧಪಡಿಸಿ ರಾಜ್ಯ ಸರ್ಕಾರಕ್ಕೆ ಕಳುಹಿಸುತ್ತಾರೆ.

ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ?

ನಿಮ್ಮ ಮನೆ, ಅಂಗಡಿ ಅಥವಾ ಜಮೀನು, ಬೆಳೆ, ಕೃಷಿ ಭೂಮಿ ಹೀಗೆ ಪ್ರವಾಹ ಅಥವಾ ಮಳೆಯಿಂದ ಯಾವುದೇ ಹಾನಿಗೊಳಗಾಗಿದ್ದರೂ ಸಹ ಮೊದಲು ನೀವು ಸ್ಥಳೀಯ ಆಡಳಿತಕ್ಕೆ ತಿಳಿಸಬೇಕು.

 ಇದು ಅತ್ಯಂತ ಮುಖ್ಯವಾದ ಹಾಗೂ ನೆನಪಿನಲ್ಲಿಟ್ಟುಕೊಳ್ಳಬೇಕಾದ ಸಂಗತಿಯಾಗಿದೆ.

ಇಲ್ಲಿದೆ ಹಂತ ಹಂತದ ವಿವರ* ಇದಕ್ಕಾಗಿ, ಗ್ರಾಮ ಪಂಚಾಯತ್, ಪುರಸಭೆ ಅಥವಾ ಬ್ಲಾಕ್ ಮಟ್ಟದಲ್ಲಿ ಲಿಖಿತ ಮಾಹಿತಿಯನ್ನು ನೀಡಬಹುದು.* ಆಡಳಿತ ಅಧಿಕಾರಿಗಳು ಹಾನಿಯನ್ನು ಪರಿಶೀಲಿಸುತ್ತಾರೆ ಮತ್ತು ವರದಿಯನ್ನು ಸಿದ್ಧಪಡಿಸುತ್ತಾರೆ.* ವರದಿಯೊಂದಿಗೆ ಬಾಧಿತ ಸ್ಥಳಗಳ ಫೋಟೋಗಳು ಮತ್ತು ವೀಡಿಯೊಗಳನ್ನು ಸಹ ಕಳುಹಿಸಲಾಗುತ್ತದೆ.* ಈ ವರದಿಯು ಜಿಲ್ಲಾಡಳಿತದಿಂದ ರಾಜ್ಯ ಸರ್ಕಾರಕ್ಕೆ ಹೋಗುತ್ತದೆ.* ಇದಾದ ನಂತರ ರಾಜ್ಯ ಸರ್ಕಾರ ಪರಿಹಾರ ಮೊತ್ತವನ್ನು ಘೋಷಿಸುತ್ತದೆ ಮತ್ತು ಪರಿಹಾರವನ್ನು ವಿತರಿಸಲಾಗುತ್ತದೆ.

ಮುಖ್ಯವಾಗಿ ನೆನಪಿನಲ್ಲಿಟ್ಟುಕೊಳ್ಳಬೇಕಾದ ವಿಷಯಗಳು:

> ಪರಿಹಾರಕ್ಕಾಗಿ ಸಾಧ್ಯವಾದಷ್ಟು ಬೇಗ ಮಾಹಿತಿ ನೀಡುವುದು ಇಲ್ಲಿ ಮುಖ್ಯವಾಗುತ್ತದೆ.> ನಷ್ಟಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುರಕ್ಷಿತವಾಗಿಡುವುದು ಮುಖ್ಯ.> ನಿಮ್ಮ ವರದಿಯನ್ನು ಸರಿಯಾಗಿ ಸಲ್ಲಿಸಲು ಸ್ಥಳೀಯ ಅಧಿಕಾರಿಗಳೊಂದಿಗೆ ಸಹಕರಿಸಬೇಕು.> ಇದಾದ ಬಳಿಕ ಪರಿಹಾರವನ್ನು ಸರ್ಕಾರ ಘೋಷಿಸಿದ ಬಳಿಕ ಅಧಿಕಾರಿಗಳ ಬಳಿಕ ಹೋಗಿ ಅಗತ್ಯ ದಾಖಲೆಗಳನ್ನು ನೀಡಿ ಪಡೆಯಬೇಕು.

Crop insurance news-ಮಳೆಯಿಂದ ಬೆಳೆ ಹಾನಿಯಾಗಿ 72 ಗಂಟೆಯೊಳಗೆ ಈ ಕೆಲಸ ಮಾಡಿದವರಿಗೆ ಮಾತ್ರ ಜಮಾ ಆಗಲಿದೆ ಬೆಳೆವಿಮೆ
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಉದ್ದೇಶಬೆಳೆ ವೈಫಲ್ಯದ ಆರ್ಥಿಕ ನಷ್ಟವನ್ನು ಕಡಿಮೆ ಮಾಡುವ ಮೂಲಕ, ಇದು ರೈತರ ಆದಾಯವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ. ಮತ್ತು ರೈತರು ಸ್ಥಿರವಾದ ಆದಾಯವನ್ನು ಹೊಂದಿರುವಾಗ, ಅವರು ಉತ್ತಮ ಕೃಷಿ ಪದ್ಧತಿಗಳಲ್ಲಿ ಹೂಡಿಕೆ ಮಾಡಬಹುದು, ಇದು ಹಲವಾರು ಪ್ರಯೋಜನಗಳನ್ನು ತರುತ್ತದೆ. ಬೆಳೆ ಹಾನಿ/ನಷ್ಟದ ವಿರುದ್ಧ ರೈತರಿಗೆ ಆರ್ಥಿಕ ನೆರವು ನೀಡುವುದು.
ಸ್ಧಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ (Localized calamity) ಆಲೀಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ(ಇನಂಡೇಷನ್), ಮೇಘಸ್ಪೋಟ (Cloud burst) ಮತ್ತು ಗುಡುಗು ಮಿಂಚುಗಳಿಂದಾಗಿ ಉಂಟಾಗುವ ಬೆಂಕಿ ಅವಘಡ (Natural fire due to lightning) ಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯುಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಯೋಜನೆಯಡಿ ಅವಕಾಶವಿರುತ್ತದೆ.
ಒಂದು ವೇಳೆ ಒಂದು ಅಧಿಸೂಚಿತ ಘಟಕದಲ್ಲಿ ಶೇಕಡಾ 25 ಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ಬೆಳೆ ನಷ್ಟವಾದರೆ ಅಧಿಸೂಚಿತ ಘಟಕದಲ್ಲಿ ಬೆಳೆ ವಿಮೆಗೆ ಒಳಪಟ್ಟ ರೈತರಲ್ಲಿಬೆಳೆ ನಷ್ಟವಾದ ರೈತರಿಗೆ ಮಾತ್ರ ಮಾದರಿ ಸಮೀಕ್ಷೆಗನುಗುಣವಾಗಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು.
ಇಂತಹ ಸ್ಧಳೀಯ ಗಂಡಾಂತರಗಳ ಕಾರಣದಿಂದ ಬೆಳೆ ನಷ್ಟಸಂಭವಿಸಿದರೆ, ಬೆಳೆ ವಿಮೆ ಮಾಡಿಸಿರುವ ರೈತರು ಬಗ್ಗೆನೇರವಾಗಿ ಸಂಬಂಧಪಟ್ಟ ಅನುಷ್ಠಾನಗೊಳಿಸುವ ವಿಮಾಸಂಸ್ಥೆಗಳ ಕಛೇರಿಗಳಿಗೆ ಅಥವಾ ಹಣಕಾಸು ಸಂಸ್ಧೆ ಅಥವಾ ಕೃಷಿ/ತೋಟಗಾರಿಕೆ ಇಲಾಖೆ ಮೂಲಕ ತಕ್ಷಣಸೂಚನೆ ನೀಡಬೇಕು.
ಇಂತಹ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆಕಾರಣಗಳನ್ನು 72 ಗಂಟೆಗಳೊಳಗಾಗಿ ತಿಳಿಸಬೇಕು.
ನಷ್ಟದ ಬಗೆಗಿನ ಮಾಹಿತಿಯನ್ನು ಸ್ವೀಕರಿಸಿದ ಮೇಲೆ ವಿಮಾಸಂಸ್ಥೆಗಳು ಬೆಳೆ ನಷ್ಟವನ್ನು ನಿರ್ಧರಿಸುವುದಕ್ಕೆ ನಷ್ಟನಿರ್ಧಾರಕರನ್ನು ಸಂಬಂಧಪಟ್ಟ ಪ್ರದೇಶಕ್ಕೆ 48 ಗಂಟೆಯೊಳಗಾಗಿ ನಿಯೋಜಿಸುವುದು.
ವಿಮೆ ಸಂಸ್ಥೆಯಿಂದ ನೇಮಿಸಲ್ಪಟ್ಟ ನಷ್ಟ ನಿರ್ಧಾರಕರುಮತ್ತು ಸ್ಥಳೀಯ ತಾಲ್ಲೂಕು/ಹೋಬಳಿ ಮಟ್ಟದ ಕೃಷಿ ಮತ್ತುತೋಟಗಾರಿಕಾ ಇಲಾಖಾ ಅಧಿಕಾರಿಗಳು ಜಂಟಿಯಾಗಿ, ಹಾನಿಗೊಳಗಾದ ರೈತರ ಸಮ್ಮುಖದಲ್ಲಿ ಬೆಳೆ ನಷ್ಟನಿರ್ಧರಿಸಲಾಗುವುದು.
ಸದರಿ ಬೆಳೆ ನಷ್ಟದ ವರದಿಯನ್ನು ಜಿಲ್ಲೆಗಳ ಇಲಾಖಾಮುಖ್ಯಸ್ಥರು ಅನುಷ್ಟಾನ ವಿಮಾ ಸಂಸ್ಥೆಗಳಿಗೆ ನೇರವಾಗಿಸಲ್ಲಿಸಲು ಕ್ರಮ ಕೈಗೊಳ್ಳುವುದು.
1. Post Harvest Losses
ಯೋಜನೆಯಡಿ ಬೆಳೆ ಕಟಾವಿನ ನಂತರ ಬೆಳೆಯನ್ನುಜಮೀನಿನಲ್ಲೆ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ (Post Harvest Losses) ಕಟಾವು ಮಾಡಿದ ಎರಡುವಾರಗಳೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕಮಳೆಯಿಂದಾಗಿ ಬೆಳೆ ನಾಶವಾದರೆ ವೈಯುಕ್ತಿಕವಾಗಿ(Case to Case basis) ವಿಮಾ ಸಂಸ್ಧೆಯು ನಷ್ಟ ನಿರ್ಧಾರ ಮಾಡಿಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಒಳಪಡಿಸಲಾಗಿದೆ.
ಬೆಳೆ ವಿಮೆ ಮಾಡಿಸಿದ ರೈತರು ಯಾರಿಗೆ ಸಂಪರ್ಕಿಸಬೇಕು?

ಬೆಳೆ ವಿಮೆ ಮಾಡಿಸಿದ ರೈತರು ಯಾವ ವಿಮಾ ಕಂಪನಿಗೆ ಹಣ ಪಾವತಿಸಿದ್ದಾರೋ ಆ ವಿಮಾ ಕಂಪನಿಗೆ ಸಂಪರ್ಕಿಸಬೇಕು. ಒಂದು ವೇಳೆ ವಿಮಾ ಕಂಪನಿಯ ನಂಬರ್‌ ಗೊತ್ತಿಲ್ಲದಿದ್ದರೆ ಬೆಳೆ ವಿಮೆ ಉಚಿತ ಸಹಾಯವಾಣಿ 1800 180 1551 ನಂಬರಿಗೆ ಕರೆ ಮಾಡಿ ನಿಮ್ಮ ಜಿಲ್ಲೆ ವಿಮಾ ಕಂಪನಿಯ ನಂಬ‌ರ್ ಪಡೆದು ಕರೆ ಮಾಡಬೇಕು.

ಬೆಳೆ ವಿಮೆ ಹಣ ಎಷ್ಟು ಜಮೆಯಾಗುತ್ತದೆ?

ಬೆಳೆ ವಿಮೆ ಮಾಡಿಸಿದ ನಂತರ ಬೆಳೆ ಎಷ್ಟು ಪ್ರಮಾಣದಲ್ಲಿ ಹಾಳಾಗಿದೆ ಹಾಗೂ ಬೆಳೆ ಯಾವ ಹಂತದಲ್ಲಿ ಹಾಳಾಗಿದೆ ಎಂಬುದನ್ನು ನಿರ್ಧರಿಸಿ ರೈತರಿಗೆ ವಿಮೆ ಹಣ ಪಾವತಿಸಲಾಗುವುದು.
]]>
Wed, 04 Jun 2025 13:04:14 +0530 shivuagrico
IPL 2025 winner&ಈ ಸಲ ಕಪ್ ನಮ್ದು,18 ವರ್ಷಗಳ ಅಭಿಮಾನಿಗಳ ಕನಸು ನನಸಾಗಿಸಿದ RCB https://krushirushi.in/IPL-2025-winner-2141 https://krushirushi.in/IPL-2025-winner-2141 IPL 2025 winner-ಈ ಸಲ ಕಪ್ ನಮ್ದು,18 ವರ್ಷಗಳ ಅಭಿಮಾನಿಗಳ ಕನಸು ನನಸಾಗಿಸಿದ RCB


 ನಿರೀಕ್ಷೆಯಂತೆಯೇ ಹಾಲಿ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ.


ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ರನ್ ಗಳ ಅಂತರದಲ್ಲಿ ಮಣಿಸಿ 18 ವರ್ಷಗಳ ಬಳಿಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.

ಆರ್ ಸಿಬಿ ನೀಡಿದ 191 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದ ಪಂಜಾಬ್ ಕಿಂಗ್ಸ್ ತಂಡ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಪಂಜಾಬ್ ಪರ ಪ್ರಿಯಾಂಶ್ ಆರ್ಯ 24 ರನ್ ಗಳಿಸಿದರೆ, ಪ್ರಭ್ ಸಿಮ್ರನ್ ಸಿಂಗ್ 26 ರನ್ ಗಳಿಸಿ ಔಟಾದರು.

ನಾಯಕ ಶ್ರೇಯಸ್ ಅಯ್ಯರ್ ಕೇವಲ 1 ರನ್ ಗಳಿಸಿ ರೊಮಾರಿಯೋ ಶೆಫರ್ಡ್ ಗೆ ವಿಕೆಟ್ ಒಪ್ಪಿಸಿದರು. ಆದರೆ ಈ ಹಂತದಲ್ಲಿ ಪಂಜಾಬ್ ಇನ್ನಿಂಗ್ಸ್ ಗೆ ಬಲ ನೀಡಿದ ಜಾಶ್ ಇಂಗ್ಲಿಸ್ 23 ಎಸೆತಗಳಲ್ಲಿ 39 ರನ್ ಗಳಿಸಿದರು. ಆದರೆ ಕೃನಾಲ್ ಪಾಂಡ್ಯಾಗೆ ವಿಕೆಟ್ ಒಪ್ಪಿಸಿದರು.


ಈ ಹಂತದಲ್ಲಿ ಪಂಜಾಬ್ ಇನ್ನಿಂಗ್ಸ್ ಜೀವ ತುಂಬಿದ್ದು ನೇಹಲ್ ವಧೇರಾ (15). ಆದರೆ ಅವರ ರನ್ ಗಳಿಕೆ ಕೂಡ 15ಕ್ಕೇ ಸೀಮಿತವಾಯಿತು. ಅಪಾಯಕಾರಿ ಪರಿಣಮಿಸಿದ್ದ ವಧೇರಾರನ್ನು ಭುವನೇಶ್ವರ್ ಕುಮಾರ್ ಔಟ್ ಮಾಡಿದರು. ಬಳಿಕ ಕ್ರೀಸ್ ಗೆ ಬಂದ ಮಾರ್ಕಸ್ ಸ್ಟಾಯ್ನಿಸ್ ಸಿಕ್ಸರ್ ಭಾರಿಸಿ 2ನೇ ಎಸೆತದಲ್ಲೇ ಭುವನೇಶ್ವರ್ ಕುಮಾರ್ ಗೆ ವಿಕೆಟ್ ಒಪ್ಪಿಸಿದರು.

ಶಶಾಂಕ್ ಸಿಂಗ್ ಹೋರಾಟ ವ್ಯರ್ಥ

ಇನ್ನು ಈ ಇನ್ನಿಂಗ್ಸ್ ನಲ್ಲಿ ಪಂಜಾಬ್ ಪರ ಅಂತಿಮ ಹಂತದಲ್ಲಿ ಹೋರಾಟ ನಡೆಸಿದ್ದು ಶಶಾಂಕ್ ಸಿಂಗ್, ಕೇವಲ 30 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 3 ಬೌಂಡರಿ ನೆರವಿನಿಂದ ಅಜೇಯ 61 ರನ್ ಗಳಿಸಿದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಿಲಿಲ್ಲ. ಅಂತಿಮವಾಗಿ ಪಂಜಾಬ್ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿ ಕೇವಲ 6 ರನ್ ಅಂತರದಲ್ಲಿ ಸೋಲು ಕಂಡಿತು.

ಆರ್ ಸಿಬಿ ಪರ ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ ತಲಾ 2 ವಿಕೆಟ್ ಪಡೆದರೆ, ಯಶ್ ದಯಾಳ್, ಜಾಶ್ ಹೇಜಲ್ ವುಡ್ ಮತ್ತು ರೊಮಾರಿಯೋ ಶೆಫರ್ಡ್ ತಲಾ 1 ವಿಕೆಟ್ ಪಡೆದರು.

]]>
Wed, 04 Jun 2025 00:59:20 +0530 shivuagrico
Karnataka rain alert&ಮುಂಗಾರು ಮಳೆ ಅರ್ಭಟಕ್ಕೆ ತಾತ್ಕಾಲಿಕ ವಿರಾಮ,ಜೂನ್ ತಿಂಗಳಲ್ಲಿ ಹೇಗಿರಲಿದೆ ಮಳೆ ಮುನ್ಸೂಚನೆ? https://krushirushi.in/Karnataka-rain-alert-2140 https://krushirushi.in/Karnataka-rain-alert-2140 Karnataka rain alert-ಮುಂಗಾರು ಮಳೆ ಅರ್ಭಟಕ್ಕೆ ತಾತ್ಕಾಲಿಕ ವಿರಾಮ,ಜೂನ್ ತಿಂಗಳಲ್ಲಿ ಹೇಗಿರಲಿದೆ ಮಳೆ ಮುನ್ಸೂಚನೆ?


ಮುಂಗಾರು ಮಳೆ ಆರ್ಭಟ ತಾತ್ಕಾಲಿಕವಾಗಿ ಕಡಿಮೆ ಆಗಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಕ್ಕೆ ಜೂನ್ ಮೂರರಿಂದ ಮತ್ತೆ ಅಲರ್ಟ್ ಘೋಷಿಸಲಾಗಿದೆ. ಅಲ್ಲಿಯವರೆಗೆ ಮೋಡ-ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್‌ 4 ರಿಂದ ಮತ್ತೆ ಮಳೆ ಜೋರು

ಬೆಂಗಳುರು ಸೇರಿದಂತೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಬೆಂಗಳೂರು, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದ್ದು ಜೂನ್ ನಾಲ್ಕರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಇಂದು ಎಲ್ಲೆಲ್ಲಿ ಮಳೆ?

ಜೂನ್ 1 ಭಾನುವಾರ,ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯದಲ್ಲಿ ಅಲ್ಲಲಗಲಿ ಮಳೆ ಬರಲಿದೆ.

ಉಳಿದಂತೆ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ. ಅಂದರೆ, ಈ ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.

ನಾಳೆಯ ಹವಾಮಾನ

ಜೂನ್-02 ಸೋಮವಾರದಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು/ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.


ಜೂನ್ 5 ರಿಂದ ಜೂನ್‌ 7 ರವರೆಗಿನ ಹವಾಮಾನ

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಹಾವೇರಿ, ಬೆಳಗಾವಿ, ಧಾರವಾಡ, ಕಲಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು ಕರ್ನಾಟಕ:

ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಿಕ್ಕಮಗಳೂರು, ಕೋಲಾರ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು/ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ. ಅಂದರೆ, ಈ ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ ತೀರಾ ಕಡಿಮೆ.

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಾಗ ಬಿಸಿಲು, ಮೋಡದ ಜೊತೆಗೆ ಅಲ್ಲಲ್ಲಿ ದಿನದಲ್ಲಿ 2 ಅಥವಾ 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈ ವಾತಾವರಣವು ಜೂನ್ 4ರ ತನಕ ಮುಂದುವರಿಯುವ ಮುನ್ಸೂಚೆನೆ ಇದ್ದು, 5 ರಿಂದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ.
ಈಗಿನಂತೆ ಜೂನ್ 10ರಿಂದ ಮತ್ತೆ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಮಳೆ ಆರಂಭವಾಗಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚೆನೆ ಇದೆ.
ಜೂನ್ 4ರ ತನಕ ಈ ವಾತಾವರಣ ಮುಂದುವರಿಯಬಹುದು. ನಂತರ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು, ಜೂನ್ 10ರಿಂದ ಸಾಮಾನ್ಯ ಮಳೆ ಪ್ರಾರಂಭವಾಗುವ ಸೂಚನೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಕಲಬುರ್ಗಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಜೂನ್ 4ರಂದು ಒಂದೆರಡು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ನಂತರ ಬಿಸಿಲಿನ ವಾತಾವರಣ ಮುಂದುವರಿಯಲಿದೆ.

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ ಚುರುಕಾಗಬಹುದು.
ಇದರ ಹೊರತು ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಮುಂದುವರಿಯಲಿದೆ.

SACHET-ಹವಾಮಾನ ಮುನ್ಸೂಚನೆಗೆ ಹೊಸ ಆ್ಯಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ,ನಿಮ್ಮ ಮೊಬೈಲ್ ನಲ್ಲೇ ಹೀಗೆ ತಿಳಿದುಕೊಳ್ಳಿ ಹವಾಮಾನ ಮುನ್ಸೂಚನೆ


ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ಮನ್ ಕಿ ಬಾತ್‌ನಲ್ಲಿ (Mann Ki Baat)ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA)ದ CAP ಆಧಾರಿತ ಇಂಟಿಗ್ರೇಟೆಡ್ ಅಲರ್ಟ್ ಸಿಸ್ಟಮ್ ಸ್ಯಾಚೆಟ್ ಆಪ್‌ ಬಗ್ಗೆ ಉಲ್ಲೇಖಿಸಿದ್ದಾರೆ. ಈ ವ್ಯವಸ್ಥೆಯು ಭಾರತದಾದ್ಯಂತ ಲಭ್ಯವಿದ್ದು, ಅದರ ವೆಬ್‌ಸೈಟ್‌ನಲ್ಲಿ ಉಲ್ಲೇಖಿಸಿದಂತೆ ಭೂ ಗುಪ್ತಚರವನ್ನು ಬಳಕೆ ಮಾಡಿಕೊಂಡು ಬಹು ತಂತ್ರಜ್ಞಾನದ ಮೂಲಕ ಮುಂಚಿನ ಎಚ್ಚರಿಕೆಯ ನೈಜ-ಸಮಯದ ಬಗ್ಗೆ ಮಾಹಿತಿಯನ್ನು ಪಡೆಯಬಹುದಾಗಿದೆ.

ಸಚೇತ್‌ನ ವೆಬ್‌ಸೈಟ್ ಪ್ರಕಾರ,"XX-NDMAEW ಹೆಡರ್‌ನಿಂದ ಎಸ್‌ಎಂಎಸ್‌ ಮೂಲಕ ವಿಪತ್ತು ಎಚ್ಚರಿಕೆಗಳನ್ನು ಸ್ವೀಕರಿಸಿಕೊಳ್ಳಬಹುದಾಗಿದ್ದು, ಬಳಕೆದಾರರು ಜಾಗರೂಕರಾಗಿರಬಹುದಾಗಿದೆ. ಆಯಪ್ ಅನ್ನು ಪ್ರತ್ಯೇಕವಾಗಿ "ಹವಾಮಾನ ಮುನ್ಸೂಚನೆ ಮಾಹಿತಿಗಾಗಿ ಮತ್ತು ಬಹು ಸ್ಥಳಗಳ ಚಂದಾದಾರಿಕೆ ಸೌಲಭ್ಯದೊಂದಿಗೆ ವಿಪತ್ತು ಎಚ್ಚರಿಕೆಗಳನ್ನು ಸ್ವೀಕರಿಸಲು ಬಳಸಬಹುದು". ಎಂದು ಮೋದಿ ತಿಳಿಸಿದ್ದಾರೆ.

ಬಳಕೆದಾರರು ತಮ್ಮ ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಬ್ರೌಸರ್‌ಗಳಲ್ಲಿ ಬ್ರೌಸರ್ ನೋಟಿಫಿಕೇಶ್‌ ಅನ್ನು ಪಡೆಯುತ್ತಾರೆ. ಬಳಕೆದಾರರು ವಿಪತ್ತು ಸಂಬಂಧಿತ ಮಾಹಿತಿಯ ಅಧಿಸೂಚನೆಯನ್ನು ತತ್‌ ಕ್ಷಣವೇ ಪಡೆಯಬಹುದು ಎಂದು ವೆಬ್‌ಸೈಟ್ ನಲ್ಲಿ ಉಲ್ಲೇಖ ಮಾಡಿದೆ.

ಆರ್‌ಎಸ್‌ಎಸ್ ಫೀಡ್‌ನಲ್ಲಿಯೂ ಎಚ್ಚರಿಕೆಯನ್ನು ಪ್ರಕಟಿಸಲಾಗುತ್ತದೆ. ಅಲ್ಲದೆ ಸುದ್ದಿ ಸಂಸ್ಥೆಗಳು ಇದಕ್ಕೆ ಚಂದಾದಾರರಾಗಿದ್ದರೆ ಮುಂಚಿತವಾಗಿ ಈ ಬಗ್ಗೆ ಮಾಹಿತಿ ಪ್ರಕಟ ಮಾಡಬಹುದಾಗಿದೆ. ಈ ಮೂಲಕ ಮುಂದೆ ಆಗುವ ದೊಡ್ಡ ಮಟ್ಟದ ಅನಾಹುತಗಳನ್ನು ತಪ್ಪಿಸಬಹುದಾಗಿದೆ.

ವೆಬ್‌ಸೈಟ್‌ನಲ್ಲಿ ಪ್ರಕಟವಾದ ಮಾಹಿತಿಯ ಪ್ರಕಾರ, ಆಪ್‌ ಅನ್ನು ಉತ್ತರ ಪ್ರದೇಶದಲ್ಲಿ ಸುಮಾರು 5.4 ಕೋಟಿ ಜನರು, ರಾಷ್ಟ್ರ ರಾಜಧಾನಿಯಲ್ಲಿ 4.6 ಕೋಟಿ ಜನರು, ಮಹಾರಾಷ್ಟ್ರದಲ್ಲಿ 1.1 ಕೋಟಿ ಜನರು ಡೌನ್‌ಲೋಡ್ ಮಾಡಿದ್ದಾರೆ.

ನೀವೂ ಆ್ಯಪ್ ಮೂಲಕ ಮಳೆ ಮುನ್ಸೂಚನೆ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.cdotindia.capsachet

ನಂತರ ಆ್ಯಪ್ ಡೌನಲ್ಲೋಡ್ ಮಾಡಿಕೊಳ್ಳಿ

ನಂತರ ಮುಂದೆ ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಮುಂದೆ ಮೇಲೆ ಕ್ಲಿಕ್ ಮಾಡಿ

ನಂತರ /(Yes) ಮಾರ್ಕ್ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಸಂಖ್ಯೆ ಅಥವಾ ಇಮೇಲ್ ಐಡಿಯನ್ನು ನಮೂದಿಸಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ

ನಂತರ ಈ ಕೆಳಗಿನಂತೆ ನಿಮಗೆ ಹವಾಮಾನ ಮಾಹಿತಿ ಸಿಗಲಿದೆ

]]>
Tue, 03 Jun 2025 07:14:02 +0530 shivuagrico
Secondary agriculture&50 ರಿಂದ 75% ಸಬ್ಸಿಡಿಯಲ್ಲಿ ಸೆಕೆಂಡರಿ ಕೃಷಿ ಯೋಜನೆಗೆ ಅರ್ಜಿ ಆಹ್ವಾನ https://krushirushi.in/Secondary-agriculture-2139 https://krushirushi.in/Secondary-agriculture-2139 Secondary agriculture-50 ರಿಂದ 75% ಸಬ್ಸಿಡಿಯಲ್ಲಿ ಸೆಕೆಂಡರಿ ಕೃಷಿ ಯೋಜನೆಗೆ ಅರ್ಜಿ ಆಹ್ವಾನ

ಸೆಕೆಂಡರಿ ಅಗ್ರಿಕಲ್ಚರ್ ಅಡಿ ಜೇನು ಸಾಕಾಣೆ, ಬೇವಿನ ಉತ್ಪನ್ನಗಳು, ಕಾರ್ನ್ ಪೌಡರ್ ತಯಾರಿಕೆ, ಹೈಡ್ರೋಪೋನಿಕ್ಸ್, ಕೈತೋಟ, ಅಡಿಕೆ ಹಾಳೆ ಉತ್ಪನ್ನಗಳು, ಅಲೊವೆರಾ ಉತ್ಪನ್ನಗಳು, ಬಿದಿರು ಉತ್ಪನ್ನಗಳು, ಅಂಟು ಉತ್ಪಾದನೆ, ರೇಷ್ಮೆ ಉತ್ಪನ್ನಗಳು, ಕುರಿಮರಿ ಹೊಸ ತಳಿ ಸಾಕಣೆ, ಹೋರಿ ಸಾಕಣೆ, ಡಯಾಂಚ ಬೆಳೆಸುವ ಮೂಲಕ ಪರ್ಯಾಯ/ಪೂರಕ ಉದ್ಯಮಗಳಿಗೆ ಉತ್ತೇಜಿಸುವುದು.

ಸೆಕೆಂಡರಿ  ಕೃಷಿ ಮಾರ್ಗಸೂಚಿ 2025-26

1. ಸೆಕೆಂಡರಿ  ಕೃಷಿ ಕುರಿತು ಹಿನ್ನೆಲೆ, ದೃಷ್ಟಿಕೋನ, ಪರಿಕಲ್ಪನೆ:

 

ಕರ್ನಾಟಕ ರಾಜ್ಯದ ರೈತರ ದಾಯ ದ್ವಿಗುಣಗೊಳಿಸುವನಿಟ್ಟಿನಲ್ಲಿ ರಾಜ್ಯ ಸೆಕೆಂಡರಿ ಕೃಷಿ ನಿರ್ದೇಶನಾಲಯವು ಮಾನ್ಯ ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷೆಯ ಪರಿಕಲ್ಪನೆಯಾಗಿರುತ್ತದೆ. ರಾಷ್ಟ್ರದಲ್ಲೇಪ್ರಥಮ ಬಾರಿಗೆ ಮಾದರಿಯಾಗಿ ಕರ್ನಾಟಕ ರಾಜ್ಯದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲು ಯೋಜಿಸಲಾಗಿರುತ್ತದೆ.

ಕೃಷಿಯ ಪ್ರಾಥಮಿಕ ಉತ್ಪನ್ನಗಳನ್ನು, ಸ್ಥಳೀಯ ಮಾನವಸಂಪನ್ಮೂಲ ಮತ್ತು ಕೌಶಲ್ಯಗಳನ್ನು ಬಳಸಿ ಮೌಲ್ಯವರ್ಧನೆ ಮಾಡುವಮೂಲಕ ರೈತರಿಗೆ ಹೆಚ್ಚಿನ ಆದಾಯ ಒದಗಿಸುವಂತಹ ಚಟುವಟಿಕೆ /ಕಾರ್ಯಗಳನ್ನು ಸೆಕೆಂಡರಿ   ಕೃಷಿ ಎಂದು ವ್ಯಾಖ್ಯಾನಿಸಲಾಗಿದೆ.

ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿಜನ್ಯ ಉತ್ಪನ್ನಗಳಸಂಸ್ಕರಣೆ, ಗ್ರಾಮೀಣ ಮತ್ತು ಗುಡಿ ಕೈಗಾರಿಕೆಗಳ ಮೂಲಕ ರೈತರಿಗೆಹೆಚ್ಚಿನ ಆದಾಯ ತರಲು ಹಾಗೂ ಗ್ರಾಮೀಣ ಭಾಗದಲ್ಲಿ ಹೆಚ್ಚಿನಉದ್ಯೋಗ ಸೃಜನೆಗೆ, ಕೃಷಿ ಉತ್ಪನ್ನಗಳಿಂದ ಉಪ ಉತ್ಪನ್ನಗಳತಯಾರಿಕೆಗೆ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಲು ಸುಸ್ಥಿರಹಾಗೂ ಕ್ರೋಡೀಕೃತ ವ್ಯವಸ್ಥೆಗಾಗಿ ಪ್ರತ್ಯೇಕ ರಾಜ್ಯ ಸೆಕೆಂಡರಿ ಕೃಷಿನಿರ್ದೇಶನಾಲಯವನ್ನು ಸರ್ಕಾರದ ಆದೇಶ ಸಂಖ್ಯೆ: .ಎಸ್. ಸಿ/73/2021 (ಪಿ.-3) ಬೆಂಗಳೂರು, ದಿನಾಂಕ: 18-01-2022 ರನ್ವಸ್ಥಾಪಿಸಲಾಗಿದೆ.  

ಸೆಕೆಂಡರಿ ಕೃಷಿ ನಿರ್ದೇಶನಾಲಯವು ಕರ್ನಾಟಕ ರಾಜ್ಯದ ರೈತರಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಪ್ರಮುಖ ಸಂಸ್ಥೆಯಾಗಿರುತ್ತದೆ. ಸದರಿ ಆದೇಶದಲ್ಲಿ ಕೃಷಿ ಹಾಗೂ ಪೂರಕಚಟುವಟಿಕೆಗಳಿಗೆ ಸಂಬಂಧಿತ ಇಲಾಖೆಗಳ ಸಹಯೋಗದೊಂದಿಗೆಅನುಷ್ಠಾನೊಳ್ಳಲು ಅನುವಾಗುವಂತೆ ಸೆಕೆಂಡರಿ ಕೃಷಿನಿರ್ದೇಶನಾಲಯವು ಕೃಷಿ, ಜಲಾನಯನ ಅಭಿವೃದ್ಧಿ, ಪಶುಸಂಗೋಪನೆ, ತೋಟಗಾರಿಕೆ, ರೇಷ್ಮೆ, ಕೃಷಿ ಮಾರುಕಟ್ಟೆ, ಅರಣ್ಯ ಹಾಗೂ ಇನ್ನಿತರೆಇಲಾಖೆಯ ಅಧಿಕಾರಿಗಳನ್ನು ಒಳಗೊಂಡಿರುತ್ತದೆ.

ಮಾರ್ಗದರ್ಶನಕ್ಕಾಗಿ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿರಾಜ್ಯಮಟ್ಟದ ಚಾಲನಾ ಸಮಿತಿ ಹಾಗೂ ಚಟುವಟಿಕೆಗಳಅನುಷ್ಠಾನಕ್ಕಾಗಿ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯನ್ನುರಚಿಸಲಾಗಿರುತ್ತದೆ.

ರೈತರ ಅದಾಯವನ್ನು ಹೆಚ್ಚಿಸುವ ಧ್ಯೇಯದೊಂದಿಗೆ ರಾಷ್ಟ್ರದಲ್ಲಿಯೇಮೊದಲ ಬಾರಿಗೆ ಸೆಕೆಂಡರಿ ಕೃಷಿ ನಿರ್ದೇಶನಾಲಯವನ್ನು ಸ್ಥಾಪಿಸಲಾಗಿದೆ. ರೈತ ಉತ್ಪಾದಕ ಸಂಸ್ಥೆಗಳನ್ನು ಬಳಸಿ ಕೃಷಿಯ ಪ್ರಾಥಮಿಕ ತ್ಪನ್ನಗಳಿಗೆಹೆಚ್ಚಿ ಮಾರುಕಟ್ಟೆ ಅವಕಾಶಗಳನ್ನು ಸೃಷ್ಟಿಸಲು ಇದುಸಹಕಾರಿಯಾಗಲಿದೆ ಎಂಬುದಾಗಿ ಘೋಷಿಸಿಲಾಗಿದೆ.

 

 

 

 

ಯೋಜನೆಯ ದೃಷ್ಟಿಕೋನ:

ಕೃಷಿಯಲ್ಲಿ ಲ್ಲಿಯವರೆಗೆಇಳುವರಿಹೆಚ್ಚಳಕ್ಕೆ ಹೆಚ್ಚಿನಮಹತ್ವವನ್ನು ನೀಡಲಾಗುತ್ತಿದ್ದು, ಸೆಕೆಂಡರಿ ಕೃಷಿ ನಿರ್ದೇಶನಾಲಯಕಾರ್ಯಕ್ರಮಗಳ ಅನುಷ್ಠಾನ ಮೂಲಕ ಉಪ ಉತ್ಪನ್ನಗಳನ್ನುತಯಾರಿಸಲು ಉತ್ತೇಜನ ನೀಡುವುದರಿಂದ (ಇಳುವರಿೆಚ್ಚಳಕ್ಕೆಹೋಲಿಸಿದಾಗ) ಸ್ಥಳೀಯ ಉದ್ಯೋಗ ಸೃಜನೆಯಿಂದ ಆರ್ಥಿಕವೃದ್ಧಿ ಮಹತ್ವ ನೀಡಿದಂತಾಗುತ್ತದೆ.

 

1. ಪ್ರಾಥಮಿಕ ಕೃಷಿ : ಕೃಷಿ ಉತ್ಪನ್ನಗಳನ್ನು ಉತ್ಪಾದಿಸುವುದು

 

2. ಸೆಕೆಂಡರಿ ಕೃಷಿ: ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರೆಜೈವಿಕ ಸಂಪನ್ಮೂಲಗಳ ಪ್ರಾಥಮಿಕ ಉತ್ಪನ್ನ ಮತ್ತುಉಪ-ಉತ್ಪನ್ನಗಳನ್ನು ಕಚ್ಚಾ ವಸ್ತುವಾಗಿ ಬಳಸಿಕೊಂಡು ಸಂಸ್ಕರಣೆ, ಮೌಲ್ಯವರ್ಧನೆ, ಪ್ಯಾಕಿಂಗ್ ಹಾಗೂ ಸೂಕ್ತ ಬ್ರ್ಯಾಂಡ್ ಮೂಲಕಮಾರುಕಟ್ಟೆ ಕಲ್ಪಿಸಿ ರೈತರ ದಾಯ ದ್ವಿಗುಣಗೊಳಿಸುವುದು ಮುಖ್ಯಧ್ಯೇಯೋದ್ದೇಶವಾಗಿದೆ.

ಕೃಷಿ ಪ್ರಾಥಮಿಕ ಉತ್ಪನ್ನಗಳನ್ನು ಸಂಸ್ಕರಿಸಿ / ಮೌಲ್ಯವರ್ಧನೆಮಾಡುವುದರ ಮೂಲಕ ಅವುಗಳಿಗೆ ಹೆಚ್ಚಿ ಮೌಲ್ಯಒದಗಿಸಿದಂತಾಗುತ್ತದೆ.

 

ಕೃಷಿ ಸಂಸ್ಕರಣೆಯಲ್ಲಿ ನಾಲ್ಕು ವಿಧಗಳಿವೆ.

 

(i) ಪ್ರಾಥಮಿಕ ಸಂಸ್ಕರಣೆ:  ಭೌತಿಕರಾಸಾಯನಿಕಬದಲಾವಣೆಗಳಿಲ್ಲದೆ ಉತ್ಪನ್ನಗಳನ್ನು ಸಂಸ್ಕರಿಸುವುದು.

ಉದಾಹರಣೆ: ಸ್ವಚ್ಛತೆ, ವಿಂಗಡಣೆ, ವರ್ಗೀಕರಿಸುವುದು, ಇತ್ಯಾದಿಗಳನ್ನು           ಒಳಗೊಂಡಿರುತ್ತದೆ.

 

(ii) ದ್ವಿತೀಯ ಹಂತದ ಸಂಸ್ಕರಣೆ:  ಪ್ರಾಥಮಿಕ ಉತ್ಪನ್ನ/ಉಪಉತ್ಪನ್ನಗಳನ್ನು (ಆಹಾರ ಆಹಾರೇತರ) ಸ್ಥಳೀಯ ಬೇಡಿಕೆಗೆಅನುಗುಣವಾಗಿ ಭೌತಿ ಮತ್ತು ಾಸಾಯನಿಕ ಬದಲಾವಣೆಗಳಮೂಲಕ ಹೆಚ್ಚಿನ ಬಾಳಿಕೆ ಬರುವಂತೆ ಸರಳ ಸಂಸ್ಕರಣೆಗೆ ಒಳಪಡಿಸುವುದು.

ಉದಾಹರಣೆ: ಉಪ್ಪಿನಕಾಯಿ, ಪಾಪಡ್, ಕೆಚಪ್ಆಹಾರಉತ್ಪನ್ನಗಳು

                      ಕಾಂಪೋಸ್ಟ್, ಚಾರ್ ಕೋಲ್ಆಹಾರೇತರಉತ್ಪನ್ನಗಳು

 

(iii) ತೃತೀಯ ಹಂತದ ಸಂಸ್ಕರಣೆ: ದ್ವಿತೀಯ ಹಂತದಲ್ಲಿ ಸಂಸ್ಕರಿಸಿದಉತ್ಪನ್ನಗಳನ್ನು ಇನ್ನೂ ಹೆಚ್ಚಿನ ಸಂಸ್ಕರಣೆಗೆ ಒಳಪಡಿಸುವುದು. ಇದು ಹೆಚ್ಚಿನ ಬಂಡವಾಳ ಹಾಗೂ ತಾಂತ್ರಿಕತೆಗಳನ್ನುಒಳಗೊಂಡಿರುತ್ತದೆ.

ಉದಾಹರಣೆ: ತಿನ್ನಲು ಸಿದ್ಧ (ready-to-eat) / ಬಿಸಿಮಾಡಿ ಊಟ ಮಾಡುವ ಆಹಾರಗಳು (heat-and-serve foods).

 

(iv) ಉನ್ನತ ಮಟ್ಟದ ಸಂಸ್ಕರಣೆ: ಇನ್ನೂ ಮೇಲ್ದರ್ಜೆ ಹೊಂದಿದ ಉನ್ನತಮಟ್ಟದ ಸಂಸ್ಕರಿತ ಉತ್ಪನ್ನಗಳು. ದ್ವಿತೀಯ ಹಂತದ ಸಂಸ್ಕರಿಸಿದಉತ್ಪನ್ನಗಳನ್ನು ಉಪಯೋಗಿಸಿಕೊಂಡು ಸಂಸ್ಕರಿಸಲಾಗುತ್ತದೆ.  ಇದು ಅತೀ ಹೆಚ್ಚಿನ ಬಂಡವಾಳ ಹಾಗೂ ತಾಂತ್ರಿಕತೆಗಳನ್ನುಒಳಗೊಂಡಿರುತ್ತದೆ.

 

2. ಸೆಕೆಂಡರಿ  ಕೃಷಿಯ  ಗುರಿ , ಉದ್ದೇಶಗಳು ಮತ್ತು ಸಹಯೋಗಇಲಾಖೆಗಳು / ಸಂಸ್ಥೆಗಳು

2.1 ಸೆಕೆಂಡರಿ ಕೃಷಿಯ ಗುರಿ:  

ಕೃಷಿ ಪ್ರಾಥಮಿಕ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡುವುದರಮೂಲಕ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ಅವಕಾಶಗಳನ್ನುಸೃಷ್ಟಿಸಿ ರೈತರ ಆದಾಯವನ್ನು ಹೆಚ್ಚಿಸುವುದು.

 

2.2 ಸೆಕೆಂಡರಿ  ಕೃಷಿಯ  ಉದ್ದೇಶಗಳು

ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳ ಮೂಲಕ ಉದ್ಯೋಗಮತ್ತು ರೈತರ ಆದಾಯವನ್ನು ಹೆಚ್ಚಿಸುವುದು. 
ರೈತ ಕುಟುಂಬಗಳಿಗೆ ವಿವಿಧ ಆದಾಯ ಮೂಲಗಳ ಸೃಜನೆಗೆಪೂರಕವಾಗಿ ಯೋಜನೆ ರೂಪಿಸಿ ಕೃಷಿಯಲ್ಲಿನ ಸಮಸ್ಯೆಗಳಪರಿಹಾರಕ್ಕೆ ಕ್ರಮವಹಿಸುವುದು.
ಕೌಶಲ್ಯ ಹಾಗೂ ಅರೆಕೌಶಲ್ಯವುಳ್ಳ ಗ್ರಾಮೀಣ ಮಾನವಸಂಪನ್ಮೂಲಗಳ ಮೂಲಕ ಕೈಗಾರಿಕೆಗಳ ಭಿವೃದ್ಧಿ ಹಾಗೂ ಸೇವಾವಿಭಾಗಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸುವುದು.
ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಒಗ್ಗೂಡಿಸಿ ಸ್ಥಳನಿರ್ದಿಷ್ಟ/ ಪ್ರಾದೇಶಿಕ ಉತ್ಪನ್ನಗಳನ್ನು ಸ್ಥಳೀಯವಾಗಿಪ್ರಸಿದ್ಧಗೊಳಿಸುವುದು
ಬೆಳೆ ಸಾಂದ್ರತೆ ಹೆಚ್ಚಿಸುವ ಕ್ರಮಗಳು ಮತ್ತು ಹೆಚ್ಚಿನ ಮೌಲ್ಯದಬೆಳೆಗಳ ವೈವಿಧ್ಯೀಕರಣ ಮೂಲಕ ಬೆಳೆ ಉತ್ಪಾದಕತೆಯಲ್ಲಿಸುಧಾರಣೆ.
ಕೃಷಿಯಿಂದ ಕೃಷಿಯೇತರ ಚಟುವಟಿಕೆ ಕೈಗೊಳ್ಳಲು ಪ್ರೇರೇಪಿಸುವುದು

2.3 :ಸಹಯೋಗ  ಇಲಾಖೆಗಳು

i. ಕೃಷಿ ಇಲಾಖೆ
ii. ತೋಟಗಾರಿಕೆ ಇಲಾಖೆ
iii. ಜಲಾನಯನ ಅಭಿವೃದ್ಧಿ ಇಲಾಖೆ
iv. ಪಶು ಸಂಗೋಪನಾ ಇಲಾಖೆ
v. ರೇಷ್ಮೆ ಇಲಾಖೆ
vi. ಮೀನುಗಾರಿಕೆ ಇಲಾಖೆ
vii. ಅರಣ್ಯ ಇಲಾಖೆ
viii. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ
ix. ಸಹಕಾರ ಇಲಾಖೆ
x. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
xi. ಕೆ. ಪಿ.ಟಿ.ಸಿ.ಎಲ್
xii. ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRLM)

2.4: ಸಹಯೋಗ ಸಂಸ್ಥೆಗಳು

i.  ಕಬ್ಬು ನಿರ್ದೇಶನಾಲಯ, ಬೆಳಗಾವಿ
ii.  ಎಲ್ಲಾ ಕೃಷಿ / ತೋಟಗಾರಿಕೆ/ ಪಶು ವೈದ್ಯಕೀಯ ವಿಶ್ವವಿದ್ಯಾಲಯಗಳು
iii.  ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ, ಮೈಸೂರು
iv.  ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ - ನಬಾರ್ಡ್
v.  ಲೀಡ್ ಬ್ಯಾಂಕ
vi.  ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ
vii.  ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತುನಿಗಮ ನಿಯಮಿತ
viii.  ಇಕ್ರಿಸ್ಯಾಟ್ (ICRISAT), ಹೈದರಾಬಾದ್
ix.  ಮ್ಯಾನೇಜ್ (MANAGE), ಹೈದರಾಬಾದ್
x.  . . ಎಮ್. ಆರ್ (IIMR), ಹೈದರಾಬಾದ್
xi.  ಕೃಷಿ ಉತ್ಪನ್ನಗಳ ಉತ್ಪಾದನೆ ಮತ್ತು ಮಾರಾಟದಲ್ಲಿತೊಡಗಿಸಿಕೊಂಡ ಪ್ರತಿಷ್ಠಿತ ಸಂಸ್ಥೆಗಳು
xii. ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ, ತಲಘಟ್ಟಪುರ

2.5: ಸಹಯೋಗ ಇಲಾಖೆಗಳು/ ಸಂಸ್ಥೆಗಳು ಸೆಕೆಂಡರಿ ಕೃಷಿಚಟುವಟಿಕೆಗಳನ್ನು ಕೈಗೊಳ್ಳಲು ಪಾಲಿಸಬೇಕಾದ ಅಂಶಗಳು

1. ಸೆಕೆಂಡರಿ ಕೃಷಿ ಚಟುವಟಿಕೆಗಳ ಗುರುತಿಸುವಿಕೆ

2. ಚಟುವಟಿಕೆಗಳ ಆಯ್ಕೆ ಮತ್ತು ಯೋಜನಾ ವರದಿ ತಯಾರಿ

3. ಚಟುವಟಿಕೆಗಳ ಯಶಸ್ಸಿನ ಮೌಲ್ಯಮಾಪನ ಮತ್ತು ವರದಿತಯಾರಿಕೆ

 

2.5.1: ಸೆಕೆಂಡರಿ ಕೃಷಿ ಚಟುವಟಿಕೆಗಳ ಗುರುತಿಸುವಿಕೆ ಹಾಗೂ ಬೆಳೆವಾರು ಚಟುವಟಿಕೆಗಳ ಮ್ಯಾಪಿಂಗ್

    ರೈತರು ಕೃಷಿಯಲ್ಲಿ ಸಂಪನ್ಮೂಲಗಳನ್ನು ಸಮರ್ಪಕವಾಗಿಬಳಸಿಕೊಂಡು ಆರ್ಥಿಕವಾಗಿ ಮುಂದುವರೆಯಲ ತಾಲ್ಲೂಕಿನ ಮುಖ್ಯಬೆಳೆಗಳನ್ನು (ಉತ್ಪನ್ನ) ಆಯ್ಕೆ ಮಾಡಿ ಆದ್ಯತೆ ನೀಡುವುದು.

ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಚಟುವಟಿಕೆಗಳನ್ನುಗುರುತಿಸುವುದು
ಜಿಲ್ಲೆಗಳಲ್ಲಿ ಕ್ಷೇತ್ರ ಸಮೀಕ್ಷೆ ಕೈಗೊಂಡು, ಅದರಂತೆ, ಅವಶ್ಯಕತೆಗನುಗುಣವಾದ ಚಟುವಟಿಕೆಗಳನ್ನು ಗುರುತಿಸುವುದುಹಾಗೂ ವ್ಯಾಪಕ ಪ್ರಚಾರ ನೀಡುವುದು.
ಪ್ರಸ್ತುತ ಜಿಲ್ಲೆಗಳಲ್ಲಿ ಪ್ರಾರಂಭಿಸಿರುವ ಮಾದರಿ ಅಗ್ರಿಸ್ಟಾರ್ಟ್ಅಪ್ ಗಳನ್ನು ಗುರುತಿಸುವುದು. ಅವುಗಳ ಕಾರ್ಯವೈಖರಿ, ಮಾರುಕಟ್ಟೆ ಪ್ರಕ್ರಿಯೆ, ವಾಣಿಜ್ಯ ಪರಿಕಲ್ಪನೆ ಕುರಿತು ಅರಿವು ಮೂಡಿಸಿಇತರರನ್ನು ಪ್ರೇರೇಪಿಸುವುದು.
ಕೃಷಿ/ ತೋಟಗಾರಿಕೆ/ ಪಶು ವೈದ್ಯಕೀಯ ವಿಶ್ವ ವಿದ್ಯಾಲಯಗಳಲ್ಲಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಯಶಸ್ವಿ ಪ್ರಾಯೋಗಿಕಸಂಸ್ಥೆಗಳಲ್ಲಿನ ಇನ್ಕುಬೇಷನ್ ಸೆಂಟರ್ ಮುಖಾಂತರ ಆರಂಭಿಕಹಂತದ ಪರಿಕಲ್ಪನೆ ಬಗ್ಗೆ ಅರಿವು ಮೂಡಿಸುವುದು.
ಸಾರ್ವಜನಿಕ/ಖಾಸಗಿ ಅನುಷ್ಠಾನ ಮಾಡಲು ಅವಕಾಶವಿದ್ದಲ್ಲಿ, ನಿಯಮಾನುಸಾರ ಕ್ರಮ ಕೈಗೊಂಡು ಚಟುವಟಿಕೆಗಳನ್ನು ಗುರುತಿಸುವುದು.

2.5.2:  ಚಟುವಟಿಕೆಗಳ ಆಯ್ಕೆ ಮತ್ತು ಯೋಜನೆ ವರದಿ ತಯಾರಿ

ಚಟುವಟಿಕೆಗಳ ಆಯ್ಕೆಯಲ್ಲಿನ ಮಾನದಂಡಗಳು:

1. ಆರ್ಥಿಕ ವಿಶ್ಲೇಷಣಾ ಪದ್ಧತಿಗಳನ್ನು ಬಳಸಿ ರೈತರ ಆದಾಯಹೆಚ್ಚಿಸುವ ಚಟುವಟಿಕೆಗಳು
2. ಶ್ರಮ/ವೆಚ್ಚ/ಸಂಕೀರ್ಣತೆ ಆಧಾರದ ಮೇಲೆ ತೊಡಗಿಸಿಕೊಂಡಿರುವಚಟುವಟಿಕೆಗಳು
ಕಡಿಮೆ ಶ್ರಮ ಮತ್ತು ಹೆಚ್ಚಿನ ಪರಿಣಾಮ- ಸುಲಭವಾಗಿ, ಕಡಿಮೆಕಾಲಮಿತಿಯಲ್ಲಿ ಯಶಸ್ಸು ಪಡೆಯಬಹುದಾದ ಚಟುವಟಿಕೆಗಳನ್ನುಪರಿಗಣಿಸಬಹುದಾಗಿದೆ.
ಹೆಚ್ಚಿನ ಶ್ರಮ ಮತ್ತು ಹೆಚ್ಚಿನ ಪರಿಣಾಮ-  ಮುಖ್ಯ ಯೋಜನೆಗಳಿಗೆ ಅನುಗುಣವಾಗಿ ಪರಿಗಣಿಸಬಹುದಾಗಿದೆ
ಕಡಿಮೆ ಶ್ರಮ ಮತ್ತು ಕಡಿಮೆ ಪರಿಣಾಮ- ಹೆಚ್ಚು ಸೂಕ್ತವಲ್ಲದವರ್ಗ
ಹೆಚ್ಚಿನ ಶ್ರಮ ಮತ್ತು ಕಡಿಮೆ ಪರಿಣಾಮ- ಹೆಚ್ಚು ಸೂಕ್ತವಲ್ಲದವರ್ಗ

ಯೋಜನೆ ಆಯ್ಕೆಗೆ ಉದಾಹರಣೆಗಳು:

ಕ್ರ ಸಂ

ಯೋಜನೆಯ ಹೆಸರು

ಶ್ರಮ/ ವೆಚ್ಚ

ಪರಿಣಾಮ/ ಲಾಭ

ಶಿಫಾರಸ್ಸು

1

ಕೃಷಿ ತ್ಯಾಜ್ಯ ಸಂಸ್ಕರಣೆ

ಮಧ್ಯಮ

ಹೆಚ್ಚು

ಸೆಕೆಂಡರಿ ಕೃಷಿ ಯೋಜನೆಗಳಡಿಪರಿಗಣಿಸುವುದು.

2

ರೈತ ಉತ್ಪಾದಕ

ಸಂಸ್ಥೆಗಳ ಮಾರುಕಟ್ಟೆವೇದಿಕೆ/ ವ್ಯವಸ್ಥೆ

ಹೆಚ್ಚು

ಹೆಚ್ಚು

ಸೆಕೆಂಡರಿ ಕೃಷಿ ಯೋಜನೆಗಳಡಿಪರಿಗಣಿಸುವುದು.

3

ಪಾಲಿಹೌಸ್ ಕೃಷಿ

ಹೆಚ್ಚು

ಹೆಚ್ಚು

ಚಾಲ್ತಿ ಯೋಜನೆಗಳಡಿಪರಿಗಣಿಸುವುದು.

      ಶ್ರಮವನ್ನು ಕಡಿಮೆ, ಮಧ್ಯಮ ಮತ್ತು ಹೆಚ್ಚು ಎಂದು ವರ್ಗಗಳಾಗಿವಿಂಗಡಣೆ ಮಾಡಲು ಚಟುವಟಿಕೆಗಳಿಗೆ ತಗಲುವ ಸಮಯ, ಅನುದಾನಮತ್ತು ಸಂಕೀರ್ಣತೆಯನ್ನು ಪರಿಗಣಿಸಬಹುದಾಗಿದೆ. ಹಾಗೆಯೇ, ಲಾಭದವರ್ಗಗಳ ವಿಂಗಡಣೆಗೆ, ಮೂಲ ಆರ್ಥಿಕ ಬಂಡವಾಳ ಹೂಡಿಕೆ ಮೇಲಿನಪ್ರತಿಫಲದನ್ವಯ (Returns on investment-ROI) ಪರಿಗಣಿಸುವುದು.

2.5.3: ಚಟುವಟಿಕೆಗಳ ಯಶಸ್ಸಿನ ಮೌಲ್ಯಮಾಪನ ಮತ್ತು ವರದಿತಯಾರಿಕೆ:

1. ಯೋಜನೆಗಳ ಪ್ರಗತಿ ಪರಿಶೀಲನೆ:  ರೂಪಿಸಿದಕ್ರಿಯಾಯೋಜನೆಯಂತೆ  ಯೋಜನೆಗಳ ಮಧ್ಯಂತರ ಪ್ರಗತಿತಿಳಿಯಲು ಪ್ರಗತಿ ಪರಿಶೀಲನೆ
ಜಿಲ್ಲಾ ಮಟ್ಟದ  ಅನುಷ್ಠಾನ ಸಮಿತಿ
ಜಿಲ್ಲಾ ಮಟ್ಟದ  ತಾಂತ್ರಿಕ ಸಮಿತಿ
ರಾಜ್ಯ ಮಟ್ಟದ ಚಾಲನಾ ಸಮಿತಿ
ಇಲಾಖೆಗಳ ಕಾರ್ಯ ಪಡೆ

 

2. ಪರಿಣಾಮ ಪರಿಶೀಲನೆ:
ೋಜನೆಯ ಫಲಾನುಭವಿಗಳ ಸಂಖ್ಯೆ
ಶೇಕಡವಾರು ಸೆಕೆಂಡರಿ ಕೃಷಿ ಅಳವಡಿಕೆ (ಯೋಜನಾ ಪೂರ್ವ ಮತ್ತು ಯೋಜನಾ ನಂತರ)
ಆದಾಯ ಹೆಚ್ಚಳ other parameters - ಯೋಜನೆ ಅನುಷ್ಠಾನದ ಮೊದಲು ಮತ್ತು ನಂತರ
ಉದ್ಯೋಗ ಸೃಜನೆ

 

3 : ಸೆಕೆಂಡರಿ ಕೃಷಿಗೆ ಸಂಬಂಧಿಸಿದಂತೆ ರೈತರ ಆದಾಯ ಹೆಚ್ಚಿಸಲುನವೀನ ಪರಿಕಲ್ಪನೆಗಳು :

ಸೆಕೆಂಡರಿ ಕೃಷಿ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಕೆಲವುಪರಿಣಾಮಕಾರಿ ಯೋಜನೆಗಳ ಕುರಿತು

3.1 ಕೃಷಿ ತ್ಯಾಜ್ಯ ಬಳಸಿ ಹೆಚ್ಚಿನ ಆದಾಯ ಗಳಿಕೆ

3.2 ರೈತ ಉತ್ಪಾದಕ ಸಂಸ್ಥೆಗಳಿಗೆ ಸೀಮಿತವಾಗಿರುವ -ಮಾರುಕಟ್ಟೆ(Digital platform)

    ವೇದಿಕೆಯನ್ನು ಎಲ್ಲಾ ಮಾರಾಟ ಕೇಂದ್ರಗಳಿಗೆ ವಿಸ್ತರಣೆಮಾಡುವುದು.

3.3 ಗ್ರಾಮ ಮಟ್ಟದಲ್ಲಿ ಕೃಷಿ ತ್ಪನ್ನಗಳಿಗೆ ಅವಶ್ಯವಿರುವ ಎಲ್ಲಾ ಕೃಷಿಸಂಸ್ಕರಣಾ ಘಟಕಗಳನ್ನು ಒಂದ ಸೂರಿನಡಿ ಸ್ಥಾಪಿಸುವುದು(Common Facility Center for Agro Processing similar to CHSC) ಮತ್ತು ಸದರಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆಯನ್ನುಪ್ರತ್ಯೇಕವಾಗಿ ಕಲ್ಪಿಸುವುದು
3.4 ಜಿಲ್ಲಾವಾರು ಇಲಾಖಾವಾರು ಮುಖ್ಯ ಬೆಳೆಗಳಿಗೆ ಆಹಾರಸರಪಳಿಯಡಿ ಬರುವ ಚಟುವಟಿಕೆಗಳ ಉತ್ತೇಜನ:
3.5 ಸ್ಥಳೀಯ ಉದ್ಯಮಗಳಿಗೆ ಉತ್ತೇಜನ ಹಾಗೂ ಭೌಗೋಳಿಕ ಸೂಚ್ಯಂಕ (Geographical indicator-GI ) ಉತ್ಪನ್ನಗಳಿಗೆ ಆದ್ಯತೆನೀಡುವುದು.
3.6 ಇತರೆ ಚಟುವಟಿಕೆಗಳ ಮೂಲಕ ಉತ್ತೇಜನ ಉದಾ: ಕೃಷಿಪ್ರವಾಸೋದ್ಯಮ

 

ವಿವರ ಕೆಳಗಿನಂತಿವೆ:

3.1 ಕೃಷಿ ತ್ಯಾಜ್ಯ ಬಳಸಿ ಹೆಚ್ಚಿನ ಆದಾಯ ಗಳಿಕೆ :

ಅ) ಬೆಳೆಯ ಅವಶೇಷಗಳು ಹಲವು ಕೈಗಾರಿಕೆಗಳಿಗೆ ಪೂರಕವಸ್ತುಗಳಾಗಿರುತ್ತವೆ.  ಆದ್ದರಿಂದ ಸಂಸ್ಕರಣೆಯಿಂದ ಇವುಗಳನ್ನುಹಲವಾರು ಕೈಗಾರಿಕೆಗಳಾಗಿ ರೂಪಿಸಬಹುದಾಗಿರುತ್ತದೆ.

 

ಉಪಯೋಗಗಳು: 

ಘನ ಇಂಧನವಾಗಿ ಬಳಸಬಹುದಾಗಿದೆ
ಗೊಬ್ಬರ ತಯಾರಿಕೆಗೆ ಮೂಲವಸ್ತುವಾಗಿ ಬಳಸಬಹುದಾಗಿದೆ
ಇತರೆ ಇಂಗಾಲ ಆಧಾರಿತ ರಾಸಾಯನಿಕಗಳ ತಯಾರಿಕೆಗಾಗಿಬಳಸಬಹುದಾಗಿದೆ

) ಕೃಷಿ ತ್ಯಾಜ್ಯಗಳಿಂದ ಕಾಂಪೋಸ್ಟ್ ತಯಾರಿಸುವುದು

 

3.2 ರೈತ ಉತ್ಪಾದಕ ಸಂಸ್ಥೆ ಕೇಂದ್ರೀಕೃತ  - ಮಾರುಕಟ್ಟೆವೇದಿಕೆಗಳು :

 

 ಕೃಷಿ ಮಾರುಕಟ್ಟೆ ವ್ಯವಸ್ಥೆಯಲ್ಲಿ ಹಲವಾರು ಖಾಸಗಿಮಾರುಕಟ್ಟೆಗಳಿದ್ದು, ರೈತ ಉತ್ಪಾದಕ ಸಂಸ್ಥೆಗಳಿಗೆ  ಕೇಂದ್ರೀಕೃತಮಾರುಕಟ್ಟೆ ವೇದಿಕೆ ರೂಪಿಸಿ,  ಸಮಗ್ರ ಮಾರುಕಟ್ಟೆ ಸಂಪರ್ಕ ಮತ್ತುತಮ್ಮ ಉತ್ಪನ್ನಗಳನ್ನು ಒಂದೇ ಸೂರಿನಡಿ  ಎಲ್ಲೆಡೆ ಮಾರಾಟಮಾಡಬಹುದಾಗಿದೆ.
ರೈತ ಉತ್ಪಾದಕ ಸಂಸ್ಥೆಗಳು ತಮ್ಮ ಉತ್ಪನ್ನಗಳಿಗೆ ಸಕ್ರಿಯವಾಗಿ ಖಾಸಗಿಮಾರುಕಟ್ಟೆಯಲ್ಲಿ ಪ್ರವೇಶ ಪಡೆಯಲು ಪ್ರತ್ಯೇಕ API (Application Programming Interface) ಹೊಂದಬಹುದಾಗಿದೆ. ಇದರಿಂದಾಗಿಖರೀದಿದಾರರ ಸಂಖ್ಯೆ ಹೆಚ್ಚಳವಾಗುವ ಜೊತೆಗೆ ಮಾಸ್ಟರ್ ಮಾರುಕಟ್ಟೆವೇದಿಕೆ ಸೃಜನೆಯಾಗುತ್ತದೆ.   ರೀತಿಯಾಗಿ ಸರ್ಕಾರದಿಂದ ರೂಪಿಸಿದಮಾರುಕಟ್ಟೆ ವೇದಿಕೆಯು ಎಲ್ಲಾ ರೈತ ಉತ್ಪಾದಕ ಸಂಸ್ಥೆಗಳಿಗೆ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಲು ಸಹಕಾರಿಯಾಗುತ್ತದೆ.

                                                                                   

3.3 ಗ್ರಾಮ ಮಟ್ಟದಲ್ಲಿ ಕೃಷಿ ಉತ್ಪನ್ನಗಳಿಗೆ ಅವಶ್ಯವಿರುವ ಎಲ್ಲಾಕೃಷಿ ಸಂಸ್ಕರಣಾ ಘಟಕಗಳನ್ನು ಒಂದೇ ಸೂರಿನಡಿ ಸ್ಥಾಪಿಸುವುದು(Common Facility Center for Agro Processing similar to CHSC) ಮತ್ತು ಸದರಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆಯನ್ನುಪ್ರತ್ಯೇಕವಾಗಿ ಕಲ್ಪಿಸುವುದು.

     ಜಿಲ್ಲೆಯ ಮುಖ್ಯ ಬೆಳೆಗಳನ್ನು ಆದರಿಸಿ ಸದರಿ ಕೃಷಿ ಉತ್ಪನ್ನಗಳನ್ನುಸೆಕೆಂಡರಿ ಕೃಷಿಗೆ ಪರಿಗಣಿಸಲು ಬೇಕಾದ  ಹಾಗೂ ಗ್ರಾಮ ಮಟ್ಟದಲ್ಲಿಅವಶ್ಯವಿರುವ ಎಲ್ಲಾ ಕೃಷಿ ಸಂಸ್ಕರಣಾ ಘಟಕಗಳನ್ನು ಒಂದೇ ಸೂರಿನಡಿಸ್ಥಾಪಿಸುವುದು. ಇದನ್ನು ಸ್ಥಳೀಯ ದ್ದಿಮೆದಾರರು / ಉತ್ತಮ ರೈತಉತ್ಪಾದಕ ಸಂಸ್ಥೆ /ಸ್ವಸಹಾಯ ಗುಂಪು ಇವರ ನೇತೃತ್ವದಲ್ಲಿ ಸ್ಥಾಪಿಸಲುಉದ್ದೇಶಿಸಲಾಗಿದೆ. ಮೂಲಭೂತ ಸೌಕರ್ಯಗಳನ್ನು ಬಳಸಿ ತಯಾರಿಸಲಾದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆಯನ್ನು ಪ್ರತ್ಯೇಕವಾಗಿ ಕಲ್ಪಿಸುವುದು.

3.4 ಜಿಲ್ಲಾವಾರು ಇಲಾಖಾವಾರು ಮುಖ್ಯ ಬೆಳೆಗಳಿಗೆ ಆಹಾರ ಸರಪಳಿ (promotion of value chain activities for major crops of the district) ಯಡಿ ಬರುವ ಚಟುವಟಿಕೆಗಳ ಉತ್ತೇಜನ

      ಜಿಲ್ಲಾವಾರು ಸೆಕೆಂಡರಿ ಕೃಷಿಗೆ ಸಾಮರ್ಥ್ಯವಿರುವ ಚಟುವಟಿಕೆಗಳನ್ನುಆಯ್ಕೆ ಮಾಡುವುದು.

3.5 ಸ್ಥಳೀಯ ಉದ್ಯಮಗಳಿಗೆ ಉತ್ತೇಜನ ಹಾಗೂ ಭೌಗೋಳಿಕ ಸೂಚ್ಯಂಕ –(Geographical indicator-GI ) ಉತ್ಪನ್ನಗಳಿಗೆ ಆದ್ಯತೆ ನೀಡುವುದು.

     ಸ್ಥಳೀಯವಾಗಿ ಚಾಲ್ತಿಯಲ್ಲಿರುವ ಉದ್ಯಮಗಳಿಗೆ ಇನ್ನೂ ಹೆಚ್ಚಿನ ತಾಂತ್ರಿಕತೆಗಳನ್ನು

      ಉತ್ತೇಜಿಸುವ ಮೂಲಕ ಸೆಕೆಂಡರಿ ಕೃಷಿಯಲ್ಲಿ ಅಳವಡಿಸಬಹುದಾಗಿದೆ.

 

3.6 ಇತರೆ ಚಟುವಟಿಕೆಗಳ ಮೂಲಕ ಉತ್ತೇಜನ
ಕೃಷಿ ಪ್ರವಾಸೋದ್ಯಮ,
ಜೇನುಸಾಕಾಣಿಕೆ,
ಅಣಬೆ ಬೇಸಾಯ,
ಬಿದಿರು ಕೃಷಿ
ಕೃಷಿ-ಅರಣ್ಯ
ಅಡುಗೆ ಎಣ್ಣೆ ಉತ್ಪಾದನೆ
ಡೈರಿ ಉತ್ಪನ್ನಗಳು

 

4 : ಒಗ್ಗೂಡಿಸುವಿಕೆಯಡಿಯಲ್ಲಿ ಕೆಳಗಿನ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಗಣಿಸುವುದು

1. ಮುದ್ರಾ ಸಾಲಗಳು ,  Stand-Up India, Start-Up India
2. RKVY-RAFTAAR: to promote incubation facilities, enterprises etc
3. ರೈತ ಉತ್ಪಾದಕ ಸಂಸ್ಥೆಗಳು
4. ಕೃಷಿ ಬಂಡವಾಳ ನಿಧಿ (AIF)
5. ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬಧ್ಧಗೊಳಿಸುವಿಕೆ ಯೋಜನೆ (PMFME)  
6. ಸ್ಪೂರ್ತಿ ಯೋಜನೆ
7. ಖಾಧಿ ಮತ್ತು ಗ್ರಾಮೋದ್ಯೋಗ ಮಂಡಳಿ ಕಾರ್ಯಕ್ರಮಗಳು( MSME)
8. ಕೌಶಲ್ಯ ಅಭಿವೃದ್ದಿಗಾಗಿ  ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRLM)
9. ರಾಷ್ಟ್ರೀಯ ಮಳೆಯಾಶ್ರಿತ ಪ್ರದೇಶಾಭಿವೃದ್ದಿ ಪ್ರಾಧಿಕಾರ (NRAA)
10. ರಾಷ್ಟ್ರೀಯ ಪಶು ಸಂಗೋಪನಾ ಮಿಷನ್ (NLM)

ಇದೇ ರೀತಿ ವಿವಿಧ ಇಲಾಖೆಯಡಿ ಲಭ್ಯವಿರುವ ಯೋಜನೆಗಳನ್ನು ಪರಿಗಣಿಸುವುದು 5. ಸೆಕೆಂಡರಿ ಕೃಷಿಯ ಅನುಷ್ಠಾನ ಮಾರ್ಗಸೂಚಿ:

 

5.1  ಪೀಠಿಕೆ:

          ರೈತರ ಆದಾಯವನ್ನು ಹೆಚ್ಚಿಸುವ ಧ್ಯೇಯದೊಂದಿಗೆ ರಾಷ್ಟ್ರದಲ್ಲೇ ಮೊದಲ ಬಾರಿಗೆ ಸೆಕೆಂಡರಿ  ಕೃಷಿ ನಿರ್ದೇಶನಾಲಯವನ್ನು ಸ್ಥಾಪಿಸಲಾಗಿದೆ. ರೈತ ಉತ್ಪಾದಕರ ಸಂಸ್ಥೆಗಳನ್ನು ಬಳಸಿ ಕೃಷಿಯ ಪ್ರಾಥಮಿಕ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ, ಈ  ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ಅವಕಾಶಗಳನ್ನು ಸೃಷ್ಟಿಸಲು ಸಹಕಾರಿಯಾಗಲಿದೆ ಎಂದು 2022-23ನೇ ಸಾಲಿನಲ್ಲಿ ಕೃಷಿ ಇಲಾಖೆಗೆ ಸಂಬಂಧಿಸಿದ ಆಯವ್ಯಯದಲ್ಲಿ ಘೋಷಣೆಯಾಗಿದೆ.

         ಕರ್ನಾಟಕ ರಾಜ್ಯದ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ  ರಾಜ್ಯ ಸೆಕೆಂಡರಿ  ಕೃಷಿ ನಿರ್ದೇಶನಾಲಯವು ಮಾನ್ಯ ಮುಖ್ಯ ಮಂತ್ರಿಗಳ ಮಹತ್ವಾಕಾಂಕ್ಷಿ ಪರಿಕಲ್ಪನೆಯಾಗಿರುತ್ತದೆ. ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ, ಗ್ರಾಮೀಣ ಮತ್ತು ಗುಡಿ ಕೈಗಾರಿಕೆಗಳ ಮೂಲಕ ರೈತರಿಗೆ ಹೆಚ್ಚಿನ ಆದಾಯ ತರಲು ಹಾಗೂ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಜನೆಗೆ ಪೂರಕವಾಗಿ, ಕೃಷಿ ಉತ್ಪನ್ನಗಳಿಂದ ಉಪ ಉತ್ಪನ್ನಗಳ ತಯಾರಿಕೆಗೆ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಲು ಸುಸ್ಥಿರ ಹಾಗೂ ಕ್ರೂಡೀಕೃತ ವ್ಯವಸ್ಥೆಗಾಗಿ ಪ್ರತ್ಯೇಕ ರಾಜ್ಯ ಸೆಕೆಂಡರಿ ಕೃಷಿ ನಿರ್ದೇಶನಾಲಯವನ್ನು ಸರ್ಕಾರದ ಆದೇಶ ಸಂ: ಎ ಎಸ್ ಸಿ/73/2021(ಪಿ-3), ಬೆಂಗಳೂರು, ದಿನಾಂಕ: 18-01-2022 ರನ್ವಯಅಧಿಸೂಚಿಸಲಾಗಿದೆ.

        ಸೆಕೆಂಡರಿ ಕೃಷಿ ನಿರ್ದೇಶನಾಲಯವು ಕರ್ನಾಟಕ ರಾಜ್ಯದ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವ ಪ್ರಮುಖ ಸಂಸ್ಥೆಯಾಗಿದ್ದು, ರಾಷ್ಟ್ರದಲ್ಲೇ ಪ್ರಪ್ರಥಮ ಮಾದರಿಯಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಯೋಜಿಸಲಾಗಿರುತ್ತದೆ.

ಸರ್ಕಾರದ ಆದೇಶ ಸಂಖ್ಯೆ: AGRI-AML/172/2023, ದಿನಾಂಕ: 06-09-2023 ರನ್ವಯ, ಸೆಕೆಂಡರಿ ಕೃಷಿ ನಿರ್ದೇಶನಾಯದಕಾರ್ಯಕ್ರಮಗಳ ಅನುಷ್ಠಾನ ಮಾರ್ಗಸೂಚಿಯನ್ನುಅನುಮೋದಿಸಲಾಗಿರುತ್ತದೆ. ಅದರಂತೆ ಕೃಷಿ ಹಾಗೂ ಕೃಷಿ ಸಂಬಂಧಿತಅವಶ್ಯವಿರುವ ಕ್ರಿಯಾಯೋಜನೆಯನ್ನು ಸೆಕೆಂಡರಿ ಕೃಷಿನಿರ್ದೇಶನಾಲಯದ ಮೂಲಕ ರಾಜ್ಯಾದ್ಯಂತಅನುಷ್ಠಾನಗೊಳಿಸಲಾಗುತ್ತದೆ.

5.2 : ಆಯವ್ಯಯ:

   2024-25ನೇ ಸಾಲಿನಲ್ಲಿ ಯೋಜನೆಯ ಅನುಷ್ಠಾನಕ್ಕಾಗಿಆಯವ್ಯಯದಲ್ಲಿ ರೂ.1.97 ಕೋಟಿಗಳ ಅನುದಾನವನ್ನು ನಿಗಧಿಪಡಿಸಲಾಗಿದೆ.

 

5.3 : ಯೋಜನೆಯ ಕಾರ್ಯ  ವ್ಯಾಪ್ತಿ

          ಕರ್ನಾಟಕ ರಾಜ್ಯದ ಹವಾಮಾನ ಆಧಾರಿತ ಕೃಷಿ ವಲಯದಆಧಾರದ ಮೇಲೆ ಐದು ಜಿಲ್ಲೆಗಳನ್ನು ಆಯ್ಕೆ ಮಾಡಿ ಅನುಷ್ಠಾನಮಾಡಲಾಗುವುದು. ಆಯ್ಕೆ ಮಾನದಂಡ ಮತ್ತು ಆಯ್ಕೆಯಾದ ಜಿಲ್ಲೆ ವಿವರ ಕೆಳಗಿನಂತಿದೆ.

 

 

ಕ್ರ ಸಂ

ಆಯ್ಕೆಯಾದ ಜಿಲ್ಲೆ

ಕೃಷಿ ವಲಯ

ತಾಲ್ಲೂಕುಗಳ ಸಂಖ್ಯೆ

1

ಕಲಬುರ್ಗಿ

ಈಶಾನ್ಯ ಅರೆಮಲೆನಾಡು ಮತ್ತು ಈಶಾನ್ಯ ಒಣ ವಲಯ

7

2

ವಿಜಯಪುರ

ಉತ್ತರ ಒಣ ವಲಯ

5

3

ದಾವಣಗೆರೆ

ಮದ್ಯಮ ಒಣ ವಲಯ ಮತ್ತು ದಕ್ಷಿಣ ಅರೆಮಲೆನಾಡು  ವಲಯ

6

4

ಮಂಡ್ಯ

ದಕ್ಷಿಣ ಒಣ ವಲಯ

7

5

ಚಿಕ್ಕಮಗಳೂರು

ದಕ್ಷಿಣ ಅರೆಮಲೆನಾಡು  ವಲಯ,

ಮದ್ಯಮ ಒಣ ವಲಯ ಮತ್ತು ಗುಡ್ಡಗಾಡು ವಲಯ

7

ಒಟ್ಟು

32

 

ಸೂಚನೆ:

1. ಆಯ್ಕೆಯಾದ ಐದು ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳಲ್ಲಿ ವ್ಯಾಪಕ ಪ್ರಚಾರ ನೀಡಿ ಅನುಷ್ಠಾನ ಮಾಡಲು ಆದ್ಯತೆ ನೀಡುವುದು. 
2. ಯೋಜನೆಯ ಪ್ರದೇಶದಲ್ಲಿ ಜೀವನಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾರ್ಯಕ್ರಮಗಳ ಅನುಷ್ಠಾನ ಜೊತೆಗೆ ಸ್ಥಳೀಯ ಅವಶ್ಯಕತೆಗೆ ಅನುಗುಣವಾಗಿ ಇಲಾಖಾವಾರು  ಸೆಕೆಂಡರಿ ಕೃಷಿ  ತಾಂತ್ರಿಕತೆಗಳನ್ನು ಗುರುತಿಸಿ ಅನುಷ್ಠಾನ ಮಾಡವುದು.

 

ಜಿಲ್ಲಾವಾರು ಸೆಕೆಂಡರಿ ಕೃಷಿಗೆ  ಸೂಕ್ತವಿರುವ ಚಟುವಟಿಕೆಗಳನ್ನು ಗುರುತಿಸುವ ಕುರಿತು

      ಕರ್ನಾಟಕ ರಾಜ್ಯದಲ್ಲಿ ಜಿಲ್ಲಾವಾರು ಬೆಳೆಗಳಲ್ಲಿ, ಕೃಷಿ ಹಾಗೂ ಕೃಷಿ ಸಂಬಂಧಿತ ವಲಯಗಳಲ್ಲಿ ಅಗಾಧವಾದ ವೈವಿಧ್ಯತೆಯನ್ನು ಕಾಣಬಹುದಾಗಿದೆ. ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆ ಪದ್ಧತಿ, ಪಶು ಸಂಗೋಪನೆ, ರೇಷ್ಮೆ, ಮೀನುಗಾರಿಕೆ, ಅರಣ್ಯ ಇತ್ಯಾದಿಗಳ ಆಧಾರದಲ್ಲಿ ಜಿಲ್ಲೆಗಳಲ್ಲಿ ವಿಭಿನ್ನ ಚಟುವಟಿಕೆಗಳಿಗೆ ಅವಕಾಶವಿದ್ದು, ಸ್ಥಳೀಯ ಅವಶ್ಯಕತೆ ಹಾಗೂ ಬೇಡಿಕೆಯನುಸಾರ ಸೂಕ್ತ ಚಟುವಟಿಕೆಗಳನ್ನು ಕೈಗೊಂಡಲ್ಲಿ ರೈತರ ಆದಾಯವನ್ನು ವೃದ್ಧಿಸಬಹುದಾಗಿದೆ.

        ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಜಿಲ್ಲಾವಾರು ಸೆಕೆಂಡರಿ ಕೃಷಿಗೆಸೂಕ್ತವಾಗಿರುವ ಸಂಭಾವ್ಯ ಚಟುವಟಿಕೆಗಳನ್ನು ಸ್ಥಳೀಯ ಅವಶ್ಯಕತೆಗನುಗುಣವಾಗಿ ಗುರುತಿಸುವ ಅವಶ್ಯಕತೆ ಇರುತ್ತದೆ. ಈ ಕಾರ್ಯವನ್ನು ಕೈಗೊಳ್ಳಲು ಸೂಕ್ತ ಸಂಸ್ಥೆಯನ್ನು ಗುರುತಿಸಿ, ನಿಗಧಿತ ಸಮಯದಲ್ಲಿ ಜಿಲ್ಲಾವಾರು ಸೂಕ್ತವಾದ ಲಾಭದಾಯಕ ಸೆಕೆಂಡರಿ ಕೃಷಿ ಚಟುವಟಿಕೆಗಳ ಮಾಹಿತಿಯನ್ನು ಕ್ರೋಡೀಕರಿಸಿ ವರದಿಯನ್ನು ತಯಾರಿಸುವುದು. ಸದರಿ ಕಾರ್ಯವನ್ನು ಕೈಗೊಳ್ಳಲು ಸೂಕ್ತವಾದ ಸಂಸ್ಥೆಯನ್ನು ನಿಯಮಾನುಸಾರ ಆಯ್ಕೆ ಮಾಡುವುದು ಹಾಗೂ ಇದಕ್ಕೆ ತಗಲುವ ವೆಚ್ಚವನ್ನು ಸಂಬಂಧಿಸಿದ ಘಟಕದಡಿ ಭರಿಸುವುದು.

 

ಸೆಕೆಂಡರಿ ಕೃಷಿಯಲ್ಲಿ ಕೈಗೊಳ್ಳುವ ಕಾರ್ಯಕ್ರಮ/ ಚಟುವಟಿಕೆಗಳ ವಿವರ :        

       ಸೆಕೆಂಡರಿ ಕೃಷಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಿಂದ ಈ ಕೆಳಗಿನ ಘಟಕಗಳಡಿ ಕೈಗೊಳ್ಳುವ ಕಾರ್ಯಕ್ರಮ/ ಚಟುವಟಿಕೆಗಳಿಗೆ ರೂಪಿಸುವ ಯೋಜನಾ ವರದಿಗಳನ್ವಯ ಅನುದಾನ ನೀಡಲಾಗುವುದು. ಸೆಕೆಂಡರಿ ಕೃಷಿ ಚಟುವಟಿಕೆಗಳನ್ನು ಪ್ರಮುಖವಾಗಿ 3 ವಿಧವಾಗಿ ವಿಂಗಡಿಸಿದೆ.

ಅ)   ಉತ್ಪಾದಿತ ಬೆಳೆಗಳ ಮೌಲ್ಯವರ್ಧನೆ: ಜಿಲ್ಲಾವಾರು ಪ್ರಮುಖ ಬೆಳೆಗಳ ಆಹಾರ ಸರಪಳಿಯಡಿ ಬರುವ ಚಟುವಟಿಕೆಗಳ ಉತ್ತೇಜನ-“Type A” activities.

ಆ)  ಪರ್ಯಾಯ ಉದ್ಯಮಗಳಿಗೆ ಉತ್ತೇಜನ – “Type B” activities

)   ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಪಶು ಸಂಗೋಪನಾ ತ್ಯಾಜ್ಯಗಳನ್ನು ಬಳಸಿ ಕೈಗೊಳ‍್ಳಬಹುದಾದ ಚಟುವಟಿಕೆಗಳಿಗೆ ಉತ್ತೇಜನ- “Type –C “activities

(ಸೂಚನೆ: ಪಿ.ಎಮ್.ಎಫ್.ಎಮ್.ಇ. (PMFME) ಯೋಜನೆಯಡಿಕೈಗೊಳ್ಳಬಹುದಾದ ಚಟುವಟಿಕೆಗಳನ್ನು ಹೊರತುಪಡಿಸಿ (separate Food Processing Directorate) ಚಟುವಟಿಕೆಗಳಿಗೆ ಸೆಕೆಂಡರಿ ಕೃಷಿ ಯೋಜನೆಯಡಿ ಒತ್ತು ನೀಡುವುದು)

5.4 ತಾಂತ್ರಿಕ ಸಮಿತಿಗಳು:

1. ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿ:  

ವೈಯಕ್ತಿಕ ಮತ್ತು ಗುಂಪು ಆಧಾರಿತ ಚಟುವಟಿಕೆಗಳ ಎಲ್ಲಾ ಯೋಜನಾ ವರದಿಗಳನ್ನು ಈ ಕೆಳಗಿನ ತಾಂತ್ರಿಕ ಸಮಿತಿಯು ಮಾರ್ಗಸೂಚಿಯನ್ವಯ ಪರಿಶೀಲಿಸಿ, ತನ್ನ ಶಿಫಾರಸ್ಸಿನೊಂದಿಗೆಅನುಮೋದನೆಗಾಗಿ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಸಲ್ಲಿಸುವುದು.

 

ಕ್ರ.ಸಂ

ಸದಸ್ಯರ ಹುದ್ದೆ

ಸ್ಥಾನ

1.

ಜಂಟಿ ಕೃಷಿ ನಿರ್ದೇಶಕರು  

ಅಧ್ಯಕ್ಷರು

2.

ಕೃಷಿ ವಿಜ್ಞಾನ ಕೇಂದ್ರದ ಸಂಯೋಜಕರು ಅಥವಾ ಸಂಬಂಧಿಸಿದ ವಿಜ್ಞಾನಿಗಳು

ಸದಸ್ಯರು

3.

ಜಂಟಿ  ನಿರ್ದೇಶಕರು (ಕೈಗಾರಿಕೆ  ಮತ್ತು ವಾಣಿಜ್ಯ ಇಲಾಖೆ)

ಸದಸ್ಯರು

4.

ಉಪ ನಿರ್ದೇಶಕರು(ಪಶು ಸಂಗೋಪನೆ)

ಸದಸ್ಯರು

5.

ಉಪ ನಿರ್ದೇಶಕರು (ತೋಟಗಾರಿಕೆ)

ಸದಸ್ಯರು

6.

ಉಪ ನಿರ್ದೇಶಕರು (ರೇಷ್ಮೆ)

ಸದಸ್ಯರು

7.

ಉಪ ನಿರ್ದೇಶಕರು (ಮೀನುಗಾರಿಕೆ)

ಸದಸ್ಯರು

8

ಪ್ರಸ್ತಾಪಿಸಿದ ಯೋಜನಾ ವರದಿಯ ಸಂಬಂಧಿತ ಜಿಲ್ಲಾ ಮಟ್ಟದ ಅಧಿಕಾರಿಗಳು

ಸದಸ್ಯರು

9

ಗುರುತಿಸಲಾದ ಜಿಲ್ಲಾ ಸಂಪನ್ಮೂಲ ವ್ಯಕ್ತಿ

ಸದಸ್ಯರು

10

ಸಹಾಯಕ ಕೃಷಿ ನಿರ್ದೇಶಕರು (ವಿ. ತ)

ಸಂಚಾಲಕರು

 

ಪರಿಶೀಲಿಸಬೇಕಾದ ಮುಖ್ಯ ಅಂಶಗಳು :

1. ಮಾರ್ಗಸೂಚಿಯನ್ವಯ ಬಂಡವಾಳ ವೆಚ್ಚ (Capital Cost), ದುಡಿಮೆ ಬಂಡವಾಳ (Working Capital), DSCR (Debt Service Coverage Ratio), IRR (Internal Rate of Return) ಹಾಗೂ BC Ratio (Benefit Cost Ratio) ಅನುಪಾತಗಳನ್ನು ಪರಿಶೀಲಿಸುವುದು.
2. ಇತರೆ ಇಲಾಖೆಯಲ್ಲಿ ಈಗಾಗಲೇ ಸಹಾಯಧನದ ಪುನರಾವರ್ತನೆ (Duplicate) ಕುರಿತು ಪರಿಶೀಲನೆ.
3. ಚಾಲ್ತಿ ಯೋಜನೆಗಳಲ್ಲಿ ಕಡಿಮೆ ಸಹಾಯಧನ ಇದ್ದಲ್ಲಿ ಅಥವಾ ಪ್ರಸಕ್ತ ವರ್ಷದಲ್ಲಿ ಅನುದಾನ ಲಭ್ಯವಿಲ್ಲದ ಸಂದರ್ಭಗಳಲ್ಲಿ ಸದರಿ ಚಟುವಟಿಕೆಗಳನ್ನು ಸೆಕೆಂಡರಿ ಕೃಷಿ ಯೋಜನೆಯಡಿ ಪರಿಗಣಿಸುವುದು.
4. ಯೋಜನೆಯ ಕಾರ್ಯಸಾಧ್ಯತೆ (Feasibility/Viability) ಕುರಿತು ಪರಿಶೀಲನೆ.

 

2. ರಾಜ್ಯ ಮಟ್ಟದ ತಾಂತ್ರಿಕ ಸಮಿತಿ

ಸಮುದಾಯ ಸೆಕೆಂಡರಿ ಕೃಷಿ ಉದ್ದಿಮೆಗೆ ಸಂಬಂಧಿಸಿದ ಯಂತ್ರೋಪಕರಣಗಳ ಸ್ಥಾಪನೆಗೆ (ಬಾಡಿಗೆ ಆಧಾರಿತ ಸೇವಾ ಕೇಂದ್ರಮಾದರಿಯಂತೆ) ಸಂಬಂಧಿಸಿದ ಎಲ್ಲಾ ಯೋಜನಾ ವರದಿಗಳನ್ನು ಈ ಕೆಳಗಿನ ತಾಂತ್ರಿಕ ಸಮಿತಿಯು ಮಾರ್ಗಸೂಚಿಯನ್ವಯ ಪರಿಶೀಲಿಸಿ, ಸೂಕ್ತ ಯೋಜನಾ ವರದಿಯನ್ನು ಅನುಮೋದಿಸಿ ಸಂಬಂಧಿಸಿದ ಜಿಲ್ಲಾ ಮಟ್ಟದ ಸಮಿತಿಗೆ ಅನುಷ್ಠಾನಕ್ಕಾಗಿ ಕಳುಹಿಸುವುದು. ರಾಜ್ಯ ಮಟ್ಟದ ತಾಂತ್ರಿಕ ಸಮಿತಿಯಲ್ಲಿ ಅನುಮೋದನೆಗೊಂಡ ಯೋಜನಾ ವರದಿಗಳನ್ನು ರಾಜ್ಯ ಮಟ್ಟದ ಚಾಲನಾ ಸಮಿತಿ ಸಭೆಯ ಗಮನಕ್ಕೆ ಮಂಡಿಸುವುದು.

 

ಕ್ರ.ಸಂ

 

ಸದಸ್ಯರ ಹುದ್ದೆ

ಸ್ಥಾನ

1.

ನಿರ್ದೇಶಕರು , ರಾಜ್ಯ ಸೆಕೆಂಡರಿ ಕೃಷಿ ನಿರ್ದೇಶನಾಲಯ

ಅಧ್ಯಕ್ಷರು

2.

ಸಂಬಂಧಿಸಿದ ಕೃಷಿ ವಿಶ್ವ ವಿದ್ಯಾಲಯದ ಇನ್ಕುಬೇಷನ್ ಕೇಂದ್ರದ ವಿಜ್ಞಾನಿಗಳು

ಸದಸ್ಯರು

3.

ಜಂಟಿ ನಿರ್ದೇಶಕರು(ಪಶು ಸಂಗೋಪನೆ)*

ಸದಸ್ಯರು

4.

ಜಂಟಿ ನಿರ್ದೇಶಕರು (ತೋಟಗಾರಿಕೆ)*

ಸದಸ್ಯರು

5.

ಜಂಟಿ ನಿರ್ದೇಶಕರು (ರೇಷ್ಮೆ)*

ಸದಸ್ಯರು

6.

ಜಂಟಿ ನಿರ್ದೇಶಕರು( ಮೀನುಗಾರಿಕೆ)*

ಸದಸ್ಯರು

7

ಜಂಟಿ ಕೃಷಿ ನಿರ್ದೇಶಕರು(ಜಲಾನಯನ ಅಭಿವೃದ್ಧಿ)*

ಸದಸ್ಯರು

8

ಪ್ರಸ್ತಾಪಿಸಿದ ಯೋಜನಾ ವರದಿಯ ಸಂಬಂಧಿತ ರಾಜ್ಯ ಮಟ್ಟದ ನೋಡಲ್ ಅಧಿಕಾರಿಗಳು

ಸದಸ್ಯರು

9

ಜಂಟಿ ಕೃಷಿ ನಿರ್ದೇಶಕರು (ಸೆಕೆಂಡರಿ  ಕೃಷಿ ನಿರ್ದೇಶನಾಲಯ)*

ಸದಸ್ಯ ಕಾರ್ಯದರ್ಶಿಗಳು

        * ಆಯಾ ಇಲಾಖೆಯ ಸೆಕೆಂಡರಿ ಕೃಷಿ ಕಾರ್ಯಪಡೆ ಮುಖ್ಯಸ್ಥರು

 

ಪರಿಶೀಲಿಸಬೇಕಾದ ಮುಖ್ಯ ಅಂಶಗಳು :

1. ಮಾರ್ಗಸೂಚಿಯನ್ವಯ ಬಂಡವಾಳ ವೆಚ್ಚ (Capital Cost), ದುಡಿಮೆ ಬಂಡವಾಳ (Working Capital), DSCR (Debt Service Coverage Ratio), IRR (Internal Rate of Return) ಹಾಗೂ BC Ratio (Benefit Cost Ratio) ಅನುಪಾತಗಳನ್ನು ಪರಿಶೀಲಿಸುವುದು.
2. ಇತರೆ ಇಲಾಖೆಯಲ್ಲಿ ಈಗಾಗಲೇ ಸಹಾಯಧನದ ಪುನರಾವರ್ತನೆ (Duplicate) ಕುರಿತು ಪರಿಶೀಲನೆ.
3. ಚಾಲ್ತಿ ಯೋಜನೆಗಳಲ್ಲಿ ಕಡಿಮೆ ಸಹಾಯಧನ ಇದ್ದಲ್ಲಿ ಅಥವಾ ಪ್ರಸಕ್ತ ವರ್ಷದಲ್ಲಿ ಅನುದಾನ ಲಭ್ಯವಿಲ್ಲದ ಸಂದರ್ಭಗಳಲ್ಲಿ ಸದರಿ ಚಟುವಟಿಕೆಗಳನ್ನು ಸೆಕೆಂಡರಿ ಕೃಷಿ ಯೋಜನೆಯಡಿ ಪರಿಗಣಿಸುವುದು.
4. ಯೋಜನೆಯ ಕಾರ್ಯಸಾಧ್ಯತೆ (Feasibility/Viability) ಕುರಿತು ಪರಿಶೀಲನೆ.

 

5.5:  ಸೆಕೆಂಡರಿ ಕೃಷಿಯ ಮುಖ್ಯ ಘಟಕಗಳು

1. ವೈಯಕ್ತಿಕ ರೈತ ಫಲಾನುಭವಿಗಳಿಗೆ ಸಹಾಯಧನ
2. ರೈತ ಉತ್ಪಾದಕರ ಸಂಸ್ಥೆಗಳಿಗೆ /ಸ್ವಸಹಾಯ ಗುಂಪು/ಸಹಾಕಾರಿ ಸಂಘಗಳು/ ಸೊಸೈಟಿಗಳು ಇತ್ಯಾದಿಗಳಿಗೆ ಸಹಾಯಧನ
3. ಸಮುದಾಯ ಸೆಕೆಂಡರಿ ಕೃಷಿ ಉದ್ದಿಮೆಗೆ ಸಂಬಂಧಿಸಿದ ಯಂತ್ರೋಪಕರಣಗಳ ಸ್ಥಾಪನೆಗೆ (ಬಾಡಿಗೆ ಆಧಾರಿತ ಸೇವಾ ಕೇಂದ್ರ  ಮಾದರಿಯಂತೆ) ಸಹಾಯಧನ

ಯೋಜನಾ ವರದಿಯಲ್ಲಿ ಪರಿಗಣಿಸಬೇಕಾದ ಅಂಶಗಳು:

1. ಬಂಡವಾಳ ವೆಚ್ಚ (capital cost):
ಯಂತ್ರೋಪಕರಣಗಳು, ಸಲಕರಣೆಗಳು ಇತ್ಯಾದಿ
ಮೂಲಭೂತ ಸೌಕರ್ಯಗಳು: ಯಂತ್ರ ಸಾಮಗ್ರಿಗಳಿಗೆ ತಳಪಾಯ , ಶೆಡ್ ಇತ್ಯಾದಿ ತಾಂತ್ರಿಕ ಸಿವಿಲ್ ಕಾಮಗಾರಿಗಳು (ಒಟ್ಟು ಯೋಜನಾ ವೆಚ್ಚದ ಶೇ.30 ಕ್ಕೆ ಮೀರದಂತೆ).
2. ದುಡಿಮೆ ಬಂಡವಾಳ (working capital):  ಇದು ಕಚ್ಚಾ ಸಾಮಗ್ರಿಗಳು, ಕಾರ್ಮಿಕ ವೆಚ್ಚ, ಸಾಗಾಣಿಕೆ ವೆಚ್ಚ, ವಿದ್ಯುತ್ ಶುಲ್ಕ, ನೀರಿನ ಸೌಲಭ್ಯ ಇತ್ಯಾದಿಗಳ ವೆಚ್ವವನ್ನು ಒಳಗೊಂಡಿದೆ.
5.6 : ಸೆಕೆಂಡರಿ ಕೃಷಿ ಚಟುವಟಿಕೆ ಕೈಗೊಳ್ಳಲು ಸಹಾಯಧನ :

 

1. ವೈಯಕ್ತಿಕ ರೈತ ಫಲಾನುಭವಿಗಳಿಗೆ  ಸಹಾಯಧನ:   

ಅ) 3 ಲಕ್ಷದವರೆಗಿನ ಸಹಾಯಧನದ ಪ್ರಸ್ತಾವನೆಗಳಿಗೆ: ಎಲ್ಲಾ ವರ್ಗದ ರೈತರಿಗೆ ಕಿರು ಉದ್ಯಮವನ್ನು ಸ್ಥಾಪಿಸಲು/ ಮೇಲ್ದರ್ಜೆಗೇರಿಸಲು ಅನುವಾಗುವಂತೆ ಶೇ. 50 ಸಹಾಯಧನಅಥವಾ ಗರಿಷ್ಟ ಸಹಾಯಧನ ರೂ.3.00 ಲಕ್ಷಗಳು ಮೀರದಂತೆ, ಅರ್ಹಯೋಜನಾ ಪ್ರಸ್ತಾವನೆಗಳಿಗೆ ಜಿಲ್ಲಾ ಅನುಷ್ಟಾನ ಸಮಿತಿಯಲ್ಲಿಅನುಮೋದನೆ ಪಡೆದು ಸಹಾಯಧನ ನೀಡುವುದು.      

    ಫಲಾನುಭವಿಗಳು ಉಳಿಕೆ ಶೇ.50 ನ್ನು  ಬ್ಯಾಂಕ್ ಸಾಲ/ ಸ್ವಂತ ಬಂಡವಾಳ ಹೂಡಿಕೆಯಿಂದ ಅನುಷ್ಟಾನ ಮಾಡಲು ಅವಕಾಶವಿರುತ್ತದೆ. ಸಹಾಯಧನವನ್ನು ಬ್ಯಾಂಕ್ ಸಾಲದ ಮುಖಾಂತರ (Backended subsidy) ಅಥವಾ ನೇರವಾಗಿ ಫಲಾನುಭವಿಗೆ ಅಥವಾ ಮಾರಾಟಗಾರರಿಗೆ (vendor) ನೀಡಲಾಗುವುದು.

ಆ) ರೂ. 3 -10 ಲಕ್ಷದವರೆಗಿನ ಸಹಾಯಧನದ ಪ್ರಸ್ತಾವನೆಗಳಿಗೆ:  ಎಲ್ಲಾ ವರ್ಗದ ರೈತರಿಗೆ ಶೇ. 50 ರ ಸಹಾಯಧನ ಅಥವಾ ಗರಿಷ್ಟ ರೂ.10.00 ಲಕ್ಷಗಳು ಮೀರದಂತೆ ಸಹಾಯಧನದ ಪ್ರಸ್ತಾವನೆಗಳಿಗೆ ಜಿಲ್ಲಾ ಅನುಷ್ಟಾನ ಸಮಿತಿಯಲ್ಲಿ ಅನುಮೋದನೆ ಪಡೆದು ಅನುಷ್ಟಾನ ಮಾಡುವುದು. ಫಲಾನುಭವಿಗಳು ಉಳಿಕೆ ಶೇ.50 ನ್ನು ಕಡ್ಡಾಯವಾಗಿ ಬ್ಯಾಂಕ್ ಸಾಲದ ರೂಪದಲ್ಲಿ ಪಡೆದುಕೊಳ್ಳುವುದು.

ಸಹಾಯಧನವನ್ನು ಬ್ಯಾಂಕ್ ಸಾಲದ ಮುಖಾಂತರ(Backended subsidy) ಅಥವಾ ಮಾರಾಟಗಾರರಿಗೆ (vendor) ನೀಡಲಾಗುವುದು.

 

ಸಹಾಯಧನಕ್ಕಾಗಿ ಈ ಕೆಳಗಿನ ವೆಚ್ಚಗಳನ್ನು ಮಾತ್ರ ಪರಿಗಣಿಸಲಾಗುವುದು.

ಯಂತ್ರೋಪಕರಣಗಳು/ ಸಲಕರೆಣೆಗಳು ಇತ್ಯಾದಿ
ಮೂಲಭೂತ ಸೌಕರ್ಯಗಳು: ವಿದ್ಯುತ್, ಯಂತ್ರ ಸಾಮಗ್ರಿಗಳಿಗೆ ತಳಪಾಯ , ಶೆಡ್ ಇತ್ಯಾದಿ ತಾಂತ್ರಿಕ ಸಿವಿಲ್ ಕಾಮಗಾರಿಗಳು (ಸಹಾಯಧನದ ಶೇ.30 ಕ್ಕೆ ಮೀರದಂತೆ)
ಸಹಾಯಧನಕ್ಕಾಗಿ ದುಡಿಮೆ ಬಂಡವಾಳವನ್ನು ಪರಿಗಣಿಸಲಾಗುವುದಿಲ್ಲ.

 

2. ರೈತ ಉತ್ಪಾದಕ ಸಂಸ್ಥೆಗಳಿಗೆ /ಸ್ವಸಹಾಯ ಸಂಘಗಳು/ಸಹಕಾರಿ ಸಂಘಗಳು / ರೈತರ ಗುಂಪು ಗಳಿಗೆ ಸೆಕೆಂಡರಿ ಕೃಷಿ ಚಟುವಟಿಕೆ ಕೈಗೊಳ್ಳಲು ಉತ್ತೇಜನ:

ಸೆಕೆಂಡರಿ ಕೃಷಿ ಕೈಗೊಳ್ಳುವ ಉತ್ಪಾದಕ ಸಂಸ್ಥೆಗಳಿಗೆ /ಸ್ವಸಹಾಯಗುಂಪಿಗೆ/ ಸಂಘ ಸಂಸ್ಥೆಗಳು/ ಸಹಾಕಾರಿ ಸಂಘಗಳು ಇತ್ಯಾದಿ ಸಂಸ್ಥಗಳಿಗೆಅನುಮೋದಿತ ಯೋಜನಾ ವೆಚ್ಚದ ಗರಿಷ್ಟ 10 ಲಕ್ಷದವರೆಗೆ ಶೇ. 50 ರ ಸಹಾಯಧನ ನೀಡಲಾಗುವುದು. ಉಳಿಕೆ ಮೊತ್ತವನ್ನು ರೈತ ಉತ್ಪಾದಕರ ಸಂಸ್ಥೆ/ ಸ್ವಸಹಾಯ ಗುಂಪು/ ಸಂಘ ಸಂಸ್ಥೆಗಳು ಬ್ಯಾಂಕ್ ಸಾಲದ ಮುಖಾಂತರ ಪಡೆಯಬೇಕಾಗಿರುತ್ತದೆ. ಈ ಯೋಜನಾ ವರದಿಗಳನ್ನು ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿಯ ಅನುಮೋದನೆಗಾಗಿ ಸಲ್ಲಿಸುವುದು. ಸಹಾಯಧನವನ್ನು ಬ್ಯಾಂಕ್ ಸಾಲದ ಮುಖಾಂತರ (Backended subsidy) ಫಲಾನುಭವಿಗಳ ಖಾತೆಗೆ ಅಥವಾ ಮಾರಾಟಗಾರರಿಗೆ (vendor) ನೀಡಲಾಗುವುದು.

ಸಹಾಯಧನಕ್ಕಾಗಿ ಈ ಕೆಳಗಿನ ವೆಚ್ಚಗಳನ್ನು ಮಾತ್ರ ಪರಿಗಣಿಸಲಾಗುವುದು.

ಯಂತ್ರೋಪಕರಣಗಳು/ ಸಲಕರೆಣೆಗಳು ಇತ್ಯಾದಿ
ಮೂಲಭೂತ ಸೌಕರ್ಯಗಳು: ಯಂತ್ರ ಸಾಮಗ್ರಿಗಳಿಗೆ ತಳಪಾಯ , ಶೆಡ್ ಇತ್ಯಾದಿ ತಾಂತ್ರಿಕ ಸಿವಿಲ್ ಕಾಮಗಾರಿಗಳು (ಸಹಾಯಧನದ ಶೇ.30 ಕ್ಕೆ ಮೀರದಂತೆ)
ಸಹಾಯಧನಕ್ಕಾಗಿ ದುಡಿಮೆ ಬಂಡವಾಳ ವೆಚ್ಚವನ್ನು ಪರಿಗಣಿಸಲಾಗುವುದಿಲ್ಲ

ಸಮುದಾಯ ಸೆಕೆಂಡರಿ ಕೃಷಿ ಉದ್ದಿಮೆಗೆ ಸಂಬಂಧಿಸಿದ ಯಂತ್ರೋಪಕರಣಗಳ ಸ್ಥಾಪನೆಗೆ (ಬಾಡಿಗೆ ಆಧಾರಿತ ಸೇವಾ ಕೇಂದ್ರ  ಮಾದರಿಯಂತೆ) ಸಹಾಯಧನ:      

ಸೆಕೆಂಡರಿ ಕೃಷಿ ಚಟುವಟಿಕೆ ಕೈಗೊಳ್ಳಲು ಬೇಕಾಗುವ ಯಂತ್ರೋಪಕರಣಗಳನ್ನು ಒಂದೇ ಸೂರಿನಡಿ ಕಲ್ಪಿಸುವ ಉದ್ದೇಶದೊಂದಿಗೆ ರೈತ ಉತ್ಪಾದಕರ ಸಂಸ್ಥೆಗಳಿಗೆ/ ಸಹಕಾರಿ ಸಂಘಗಳು /ಸ್ವಸಹಾಯ ಗುಂಪಿಗೆ ಇತ್ಯಾದಿ ಅನುಮೋದಿತ ಯೋಜನಾ ವರದಿಯ ಗರಿಷ್ಟ 15 ಲಕ್ಷದವರೆಗೆ ಅಥವಾ ಶೇ. 50 ಸಹಾಯಧನವನ್ನು ನೀಡಲಾಗುವುದು. ಉಳಿಕೆ ಮೊತ್ತವನ್ನುಆಯ್ಕೆಯಾದ ಸಂಸ್ಥೆಯು ಬ್ಯಾಂಕ್ ಸಾಲದ ಮುಖಾಂತರಭರಿಸಬೇಕಾಗಿರುತ್ತದೆ. ಸಹಾಧನ ಪಡೆಯಲು ಸಂಸ್ಕರಣ ಘಟಕದ ಜೊತೆ ಶೀತಲ ಘಟಕ, ಶೇಕರಣಾ ಮಳಿಗೆಗಳು ಹಾಗೂ ಪ್ರಯೋಗಾಲಯಗಳನ್ನು ಒಳಗೊಂಡಿರಬೇಕು. ಈ ಯೋಜನಾ ವರದಿಗಳನ್ನು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಶಿಫಾರಸ್ಸಿನೊಂದಿಗೆ ರಾಜ್ಯ ಮಟ್ಟದ ತಾಂತ್ರಿಕ ಸಮಿತಿಯ ಅನುಮೋದನೆಗಾಗಿ ಸಲ್ಲಿಸುವುದು.

ಸಹಾಯಧನಕ್ಕಾಗಿ ಈ ಕೆಳಗಿನ ವೆಚ್ಚಗಳನ್ನು ಮಾತ್ರ ಪರಿಗಣಿಸಲಾಗುವುದು.

ಯಂತ್ರೋಪಕರಣಗಳು/ ಸಲಕರೆಣೆಗಳು ಇತ್ಯಾದಿ
ಮೂಲಭೂತ ಸೌಕರ್ಯಗಳು: ವಿದ್ಯುತ್, ಯಂತ್ರ ಸಾಮಗ್ರಿಗಳಿಗೆ ತಳಪಾಯ , ಶೆಡ್ ಇತ್ಯಾದಿ ತಾಂತ್ರಿಕ ಸಿವಿಲ್ ಕಾಮಗಾರಿಗಳು (ಸಹಾಯಧನದ ಶೇ.30 ಕ್ಕೆ ಮೀರದಂತೆ)
ಸಹಾಯಧನಕ್ಕಾಗಿ ದುಡಿಮೆ ಬಂಡವಾಳ ವೆಚ್ಚವನ್ನು ಪರಿಗಣಿಸಲಾಗುವುದಿಲ್ಲ

 

5.7 ಅರ್ಹತೆಗಳು:
1. 18 ವರ್ಷ ಮೇಲ್ಪಟ್ಟವರಾಗಿರಬೇಕು
2. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅವಕಾಶವಿರುತ್ತದೆ
3. ಅರ್ಹ ಫಲಾನುಭವಿಗಳು:
ವೈಯಕ್ತಿಕ ಫಲಾನುಭವಿಗಳು: ರೈತ/ರೈತ ಮಹಿಳೆ/ ಕೃಷಿ ಕಾರ್ಮಿಕರುಇತ್ಯಾದಿ
ಅರ್ಹ ಗುಂಪುಗಳು: ರೈತ ಉತ್ಪಾದಕ ಸಂಸ್ಥೆಗಳಿಗೆ /ಸ್ವಸಹಾಯ ಸಂಘಗಳು/ಸಹಕಾರಿ ಸಂಘಗಳು/ ರೈತರ ಗುಂಪುಗಳು ಇತ್ಯಾದಿ
ಸಮುದಾಯ ಆಧಾರಿತ ಮೂಲಸೌಕರ್ಯದಡಿ: ರೈತ ಉತ್ಪಾದಕರಸಂಸ್ಥೆಗಳಿಗೆ /ಸ್ವಸಹಾಯ ಗುಂಪುಗಳು/ ಸಹಕಾರಿ ಸಂಘಗಳು/ ರೈತರ ಗುಂಪುಗಳು ಇತ್ಯಾದಿ ಸಹಾಯಧನ ಪಡೆಯಬಹುದು
4. ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿ ಮತ್ತು ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಮುಂದೆ ಪ್ರಸ್ತಾವನೆಗಳನ್ನು ಮಂಡಿಸಿದಾಗ ಯೋಜನೆಪುನಾರಾವರ್ತನೆ (ಡುಫ್ಲಿಕೇಶನ್) ಆಗದ ಕುರಿತು ಖಾತರಿಪಡಿಸಬೇಕು ಮತ್ತು ಸಂಭದಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾಪ್ರಮಾಣಪತ್ರ ಪಡೆಯಬೇಕು
5. 01.04.2024 ನಂತರ ಹೊಸದಾಗಿ ಸ್ಥಾಪಿಸಲ್ಪಟ್ಟ/ ಮೇಲ್ದರ್ಜೆಗೇರಿಸಿದ ಘಟಕಗಳನ್ನು ಮಾತ್ರ ಪರಿಗಣಿಸುವುದು.
5.8 ಅನುಷ್ಠಾನಗೊಳಿಸುವ ವಿಧಾನ:
1.   ಸೆಕೆಂಡರಿ ಕೃಷಿ ನಿರ್ದೇಶನಾಲಯವು, ಸೆಕೆಂಡರಿ ಕೃಷಿಯಲ್ಲಿ ವ್ಯಾಖ್ಯಾನಿಸಿದಂತೆ ಎಲ್ಲಾ ಇಲಾಖೆಗಳಿಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಏಕ ಗವಾಕ್ಷಿ” ಮಾದರಿಯಲ್ಲಿ ಸ್ವೀಕರಿಸಲು ಹಾಗೂ ಕಾರ್ಯನಿರ್ವಹಿಸಲು ಯೋಜಿಸಲಾಗಿರುತ್ತದೆ.
2.  ಇಲಾಖೆಯಡಿ ಈಗಾಗಲೇ ಚಾಲ್ತಿಯಲ್ಲಿರುವ ಕೇಂದ್ರ ಪುರಸ್ಕೃತ ಹಾಗೂ ರಾಜ್ಯ ವಲಯ ಯೋಜನೆಗಳಡಿ ಒಗ್ಗೂಡಿಸುವಿಕೆಗೆ ಕ್ರಮ ಕೈಗೊಳ್ಳಲು ಅವಕಾಶವಿರುತ್ತದೆ.
3.  ಸೆಕೆಂಡರಿ ಕೃಷಿ ಕುರಿತು ರಾಜ್ಯ ಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳ ಮೂಲಕ ವ್ಯಾಪಕ ಪ್ರಚಾರ ನೀಡಲು ಜಂಟಿ ಕೃಷಿ ನಿರ್ದೇಶಕರು ಕ್ರಮ ಕೈಗೊಳ್ಳುವುದು(ಘಟಕವಾರು ವೆಚ್ಚವನ್ನು ಅನುಬಂಧ- 2 ರಲ್ಲಿ ನೀಡಿದೆ)
4.  ಇತರೆ ಇಲಾಖೆಯಲ್ಲಿ ಈಗಾಗಲೇ ಸಹಾಯಧನದ ಪುನರಾವರ್ತನೆ (Duplication) ಯಾಗದಂತೆ ಸಂಬಂಧಪಟ್ಟ ಇಲಾಖೆಗಳಿಂದ ನಿರಾಪೇಕ್ಷಣಾ ಪತ್ರ ಪಡೆಯುವುದು.
5.  ನೂತನ/ ನವೀನ ಪರಿಕಲ್ಪನೆಗಳನ್ನು, ಚಟುವಟಿಕೆಗಳನ್ನು ಸೂಕ್ತ ಯೋಜನಾ ವರದಿಯೊಂದಿಗೆ ಆದ್ಯತೆಯೊಂದಿಗೆ ಅನುಷ್ಠಾನ ಮಾಡುವುದು.
6.  ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆವಾರು ವಿಷಯತಜ್ಞರು ಹಾಗೂ ಪರಿಣಿತರೊಳಗೊಂಡಂತೆ, ಪ್ರತ್ಯೇಕ ಕಾರ್ಯಪಡೆ ರಚಿಸಲಾಗಿರುತ್ತದೆ. Website ನಲ್ಲಿ ಇಲಾಖಾವಾರು ಕಾರ್ಯಪಡೆಯ ಮಾಹಿತಿ ಲಭ್ಯವಿದ್ದು ಇವರನ್ನು ಸಂಪರ್ಕಿಸಿ ಮಾಹಿತಿ ಪಡೆಯುವುದು.
7.  ಜಿಲ್ಲಾ ಮಟ್ಟದಲ್ಲಿ:   ವೈಯಕ್ತಿಕ ಹಾಗೂ ಗುಂಪು ಆಧಾರಿತ ಚಟುವಟಿಕೆಗಳ ಸಹಾಯಧನದ ಪ್ರಸ್ತಾವನೆಗಳನ್ನು ಜಿಲ್ಲಾ ತಾಂತ್ರಿಕ ಸಮಿತಿಯಲ್ಲಿ ಪರಿಶೀಲಿಸಿ ಅರ್ಹ ಪ್ರಸ್ತಾವನೆಗಳನ್ನು ಜಿಲ್ಲಾ ಮಟ್ಟದಅನುಷ್ಠಾನ ಸಮಿತಿಯಲ್ಲಿ ಅನುಮೋದನೆ ನೀಡಿಅಂತಿಮಗೊಳಿಸುವುದು. ಹಾಗೆಯೇ ಸದರಿ ಅನುಮೋದಿತ ಚಟುವಟಿಕೆಗಳ ವಿವರವನ್ನು ಮಾಹಿತಿಗಾಗಿ ರಾಜ್ಯ ಮಟ್ಟದ ಸೆಕೆಂಡರಿ ಕೃಷಿ ನಿರ್ದೇಶನಾಲಯಕ್ಕೆ ವರದಿ ಸಲ್ಲಿಸುವುದು.  
8.  ರಾಜ್ಯ ಮಟ್ಟದಲ್ಲಿ: ರಾಜ್ಯ ಮಟ್ಟದ ಸೆಕೆಂಡರಿ ಕೃಷಿ ನಿರ್ದೇಶನಾಲಯವು ಜಿಲ್ಲೆಗಳಿಂದ ಬಂದಿರುವ ಸಮುದಾಯ ಸೆಕೆಂಡರಿ ಕೃಷಿ ಉದ್ದಿಮೆಗೆ ಸಂಬಂಧಿಸಿದ ಯಂತ್ರೋಪಕರಣಗಳ ಸ್ಥಾಪನಾಘಟಕಗಳ ಯೋಜನಾ ವರದಿ/Business plan ಗಳನ್ನು ಸಂಬಂಧಿತ ಇಲಾಖೆಗಳಿಂದ ನಿಯೋಜಿಸಲಾದ ಅಧಿಕಾರಿಗಳನ್ನೊಳಗೊಂಡ ತಾಂತ್ರಿಕ ಸಮಿತಿಯಲ್ಲಿ ನಿಯಮಾನುಸಾರ ಪರಿಶೀಲಿಸಿ ಅನುಮೋದನೆ ನೀಡುವುದು. ಅನುಮೋದನೆಗೊಂಡ ಯೋಜನಾ ವರದಿಗಳನ್ನು ರಾಜ್ಯಮಟ್ಟದ ಚಾಲನಾ ಸಮಿತಿ ಸಭೆಯ ಗಮನಕ್ಕೆ ಮಂಡಿಸುವುದು.ಅನುಮೋದಿತ ಸೆಕೆಂಡರಿ ಕೃಷಿ ಚಟುವಟಿಕೆಗಳನ್ನು ಆಯಾ ಜಿಲ್ಲೆಗಳಲ್ಲಿಅನುಷ್ಠಾನ ಮಾಡಲಾಗುವುದು.

   

 

ವಿಶೇಷ ಸೂಚನೆ: ಸ್ವೀಕೃತವಾಗುವ ಯೋಜನಾ ಪ್ರಸ್ತಾವನೆಗಳನ್ನು ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿಯಲ್ಲಿ ಇಲಾಖಾಧಿಕಾರಿಗಳು ಅನುದಾನ ಲಭ್ಯತೆಯನ್ನು ಪರಿಗಣಿಸಿ, ಪರಿಶೀಲಿಸಿ ಅನುಮೋದನೆ ನೀಡುವುದು /ಶಿಫಾರಸ್ಸು ಮಾಡುವುದು.

 

 

 

5.9  ನೋಂದಣಿ ಮತ್ತು ಅರ್ಜಿ ಸಲ್ಲಿಸುವಿಕೆ:

(ಅ) ಸೆಕೆಂಡರಿ ಕೃಷಿ ಚಟುವಟಿಕೆಗಳಲ್ಲಿ ಆಸಕ್ತ ವೈಯಕ್ತಿಕ ಫಲಾನುಭವಿಗಳನ್ನು ಅಥವಾ ಗುಂಪು / ಸಮುದಾಯ ಆಧಾರಿತ ಚಟುವಟಿಕೆಗಳನ್ನು ಕೈಗೊಳ್ಳಲು ವ್ಯಾಪಕ ಪ್ರಚಾರ ನೀಡುವುದು.

(ಆ) ಆಸಕ್ತ ರೈತರು ನಿಗದಿತ ನಮೂನೆಲ್ಲಿ (ನಮೂನೆ-1 & 2) ಅವರವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ/ ಸಹಾಯಕ ಕೃಷಿ ನಿರ್ದೇಶಕರ ಕಛೇರಿ/ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಅರ್ಜಿ ಸಲ್ಲಿಸುವುದು.

(ಇ) ಸಲ್ಲಿಸಕೆಯಾಅರ್ಜಿಗಳನ್ನು ಅರ್ಜಿಗಳನ್ನು ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿಗೆ ಮಂಡಿಸಿ, ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ಅನುಮೋದನೆ ನಂತರ ಮಂಜೂರಾತಿ ನೀಡುವುದು.  

() ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಮಂಜೂರಾತಿ ನಂತರ ಅರ್ಜಿಯನ್ನು ಸಹಾಯಕ ಕೃಷಿ ನಿರ್ದೇಶಕರಿಗೆ ಕಳುಹಿಸುವುದು.  ಸಹಾಯಕ ಕೃಷಿ ನಿರ್ದೇಶಕರು ಈ ಮಂಜೂರಾತಿಯನ್ನು ಆಧರಿಸಿ ಸಂಬಂಧಪಟ್ಟ ಫಲಾನುಭವಿಗೆ ಕಾರ್ಯಾದೇಶ ಪತ್ರವನ್ನು ನೀಡುವುದು.

() ಫಲಾನುಭವಿಯು ಯೋಜನಾಪ್ರಸ್ತಾವನೆಯ ಅನುಸಾರಯಂತ್ರೋಪಕರಣಗಳೊಂದಿಗೆ ಸೆಕೆಂಡರಿ ಕೃಷಿ ಚಟುವಟಿಕೆಗಳಿಗಾಗಿ ಘಟಕವನ್ನು ಸ್ಥಾಪಿಸುವುದು.  ಘಟಕ ಸ್ಥಾಪನೆಯ ನಂತರ ಪತ್ರ ಮುಖೇನ ಸಹಾಯಧನಕ್ಕಾಗಿ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸುವುದು.

() ಕೃಷಿ ಅಧಿಕಾರಿಯು ಸದರಿ ಘಟಕಕ್ಕೆ ಭೇಟಿ ನೀಡಿ ಸದರಿ ಘಟಕಚಾಲ್ತಿ ಇರುವ ಕುರಿತು ಖಾತರಿಪಡಿಸಿಕಂಡು ಯಂತ್ರೋಪಕರಣಗಳಿರುವಜಿ.ಪಿ.ಎಸ್. ಫೋಟೋ ಹಾಗೂ ಇತರೆ ದಾಖಲಾತಿಗಳೊಂದಿಗೆ (Invoice, Electricity Bill, 5 ವರ್ಷದವೆರೆಗೆ ಮುಂದುವೆರೆಸುವುದಾಗಿ ಮತ್ತುಯಾರಿಗೂ ಮಾರಟ ಮಾಡದಿರುವ ಕುರಿತು ಮುಚ್ಚಳಿಕೆ ಪತ್ರ)ಸಹಾಯಧನ ಬಿಡುಗಡೆಗಾಗಿ ಸಹಾಯಕ ಕೃಷಿ ನಿರ್ದೇಶಕರಿಗೆಪ್ರಸ್ತಾವನೆಯನ್ನು ಸಲ್ಲಿಸುವುದು.

() ಸಹಾಯಕ ಕೃಷಿ ನಿರ್ದೇಶಕರು ಕೃಷಿ ಅಧಿಕಾರಿಯವರಿಂದ ಸ್ವೀಕರಿಸಿದ ಪ್ರಸ್ತಾವನೆಯನ್ನು ಪರಿಶೀಲಿಸಿದ ನಂತರ ಆರ್ಥಿಕ ಮಂಜೂರಾತಿ ನೀಡಿ , ಉಪ ಕೃಷಿ ನಿರ್ದೇಶಕರ ಮೇಲುಸಹಿಯೊಂದಿಗೆ ಸಹಾಯಧನಕ್ಕಾಗಿ ಬಿಲ್ಲನ್ನು ಖಜಾನೆಗೆ ಸಲ್ಲಿಸುವುದು.  ಖಜಾನೆಯಿಂದ ಸಹಾಯಧನ ಪಾವತಿಯಾದ ನಂತರ ಫಲಾನುಭವಿಯಿಂದ ಸಹಾಯಧನ ಪಡೆದಿದ್ದಕ್ಕೆ ಸ್ವೀಕೃತಿಯನ್ನು ಪಡೆಯುವುದು.

() ಸಮುದಾಯ ಆಧಾರಿತ ಪ್ರಸ್ತಾವನೆಗಳಿಗೆ ಜಂಟಿ ಕೃಷಿ ನಿರ್ದೇಶಕರ ಶಿಫಾರಸ್ಸಿನೊಂದಿಗೆ ನಿರ್ದೇಶಕರು, ಸೆಕೆಂಡರಿ ಕೃಷಿ ನಿರ್ದೇಶನಾಲಯಕ್ಕೆಸಲ್ಲಿಸುವುದು.  ಸ್ವೀಕರಿಸಿದ ಪ್ರಸ್ತಾವನೆಗಳನ್ನು ರಾಜ್ಯ ಮಟ್ಟದ ತಾಂತ್ರಿಕ ಸಮಿತಿಯಲ್ಲಿ ನಿಯಮಾನುಸಾರ ಪರಿಶೀಲಿಸಿ ಅನುಮೋದನೆ ನೀಡುವುದು.ಅನುಮೋದನೆಗೊಂಡ ಯೋಜನಾ ವರದಿಗಳನ್ನು ರಾಜ್ಯ ಮಟ್ಟದ ಚಾಲನಾಸಮಿತಿ ಸಭೆಯ ಗಮನಕ್ಕೆ ಮಂಡಿಸುವುದು. ಇಂತಹ ಪ್ರಸ್ತಾವನೆಗಳಿಗೆ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಕಾರ್ಯಾದೇಶ ಪತ್ರ ನೀಡುವುದು ಮತ್ತು ಕೃಷಿ ಅಧಿಕಾರಿ ಘಟಕ ಸ್ಥಾಪನೆ ನಂತರ ತಪಾಸಣೆ ಕೈಗೊಂಡು, ಜಿ.ಪಿ.ಎಸ್. ಪೋಟೋಗಳು ಹಾಗೂ ಇತರೆ ದಾಖಲಾತಿಗಳನ್ನು ಅಪ್ ಲೋಡ್ ಮಾಡಿ, ಸಹಾಯಕ ಕೃಷಿ ನಿರ್ದೇಶಕರಿಗೆ ಪ್ರಸ್ತಾವನೆಯನ್ನುಫಾರ್ವಡ್ ಮಾಡುವುದು. ಸಹಾಯಕ ಕೃಷಿ ನಿರ್ದೇಶಕರು ಸಹಾಯಧನ ಬಿಡುಗಡೆಗೆ ಖಜಾನೆಗೆ ಬಿಲ್ಲನ್ನು ಸಲ್ಲಿಸುವುದು.

I. ಸಹಾಯಧನ ನೀಡುವ ವಿಧಾನ:

ಅ) ಜಿಲ್ಲೆಗಳಿಗೆ ಖಜಾನೆ -2 ಮುಖಾಂತರ ರಾಜ್ಯ ಸೆಕೆಂಡರಿ ಕೃಷಿ ನಿರ್ದೇಶನಾಲಯದಿಂದ ಅನುದಾನ ಬಿಡುಗಡೆ ಮಾಡಲಾಗುವುದು.

ಆ) ವೈಯಕ್ತಿಕ/ ರೈತ್ಪಾದಕ ಸಂಸ್ಥೆಗಳು/ಸ್ವಸಹಾಯ ಗುಂಪು/ ಸಮುದಾಯ ಕೃಷಿ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಜಿಲ್ಲೆಗಳಿಂದ ಫಲಾನುಭವಿಗಳಿಗೆ ಸಹಾಯಧನ ವಿತರಿಸತಕ್ಕದ್ದು.

 

5.10: ವಿವಿಧ ಕಾರ್ಯಪಡೆಯ ಜವಾಬ್ದಾರಿಗಳು:

 

I. ಕೃಷಿ ಅಧಿಕಾರಿಗಳು:
1. ರೈತ ಸಂಪರ್ಕ ಕೇಂದ್ರದ ಕೃಷಿ ಆಧಿಕಾರಿಗಳು ಸಹಯೋಗ ಇಲಾಖೆಗಳಲ್ಲಿನ ಕ್ಷೇತ್ರ ಮಟ್ಟದ ಅಧಿಕಾರಿಗಳ ಸಹಯೋಗದೊಂದಿಗೆ ಸೆಕೆಂಡರಿ ಕೃಷಿ ಅನುಷ್ಠಾನ ಮಾಡಲು ಸೂಕ್ತ ಪ್ರಚಾರದ ಮೂಲಕ ರೈತರಿಗೆ/ ರೈತ ಉತ್ಪಾದಕ ಸಂಸ್ಥೆಗಳು/ಸ್ವಸಹಾಯ ಗುಂಪುಗಳಿಗೆಚಟುವಟಿಕೆ ಕೈಗೊಳ್ಳಲು ಪ್ರೇರೀಪಿಸುವುದು ಹಾಗೂ ಪಲಾನುಭವಿಗಳ ಅರ್ಜಿಗಳನ್ನು ನೊಂದಾಯಿಸಲು ಮಾರ್ಗದರ್ಶನ ನೀಡುವುದು.
2. ಹೋಬಳಿ ಮಟ್ಟದ ವಿವಿಧ ಇಲಾಖೆಗಳೊಂದಿಗೆ ಸೆಕೆಂಡರಿ ಕೃಷಿ ಅನುಷ್ಠಾನಮಾಡಲು ಸಮನ್ವಯ ಸಾಧಿಸುವುದು.
3. ಆಯ್ಕೆಯಾದ ಫಲಾನುಭವಿಗಳ ಸ್ಥಳ ಪರಿಶೀಲನೆ ಮಾಡಿ ವರದಿ ನೀಡುವುದು (100%).

 

II. ಸಹಾಯಕ ಕೃಷಿ ನಿರ್ದೇಶಕರು:
1. ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೈತ ಉತ್ಪಾದಕ ಕೇಂದ್ರಗಳು/ಸ್ವಸಹಾಯ ಗುಂಪುಗಳಿಗೆ ಚಟುವಟಿಕೆ ಕೈಗೊಳ್ಳಲು ಪ್ರೇರೇಪಿಸುವುದು.
2. ತಾಲ್ಲೂಕಿನಲ್ಲಿ ಸೆಕೆಂಡರಿ ಕೃಷಿ ಅಳವಡಿಕೆಗೆ ಸಂಬಂಧಿಸಿದಂತೆ ವಿಸ್ತರಣಾ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಲು ಕ್ರಮ ವಹಿಸುವುದು.
3. ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳೊಂದಿಗೆ ಸೆಕೆಂಡರಿಕೃಷಿ ಅನುಷ್ಠಾನ ಮಾಡಲು ಸಮನ್ವಯ ಸಾಧಿಸುವುದು.
4. ಆಯ್ಕೆಯಾದ ಫಲಾನುಭವಿಗಳ ಸ್ಥಳ ಪರಿಶೀಲನೆ ಮಾಡಿ ವರದಿ ನೀಡುವುದು (25%).
5. ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ಮೂಲಕ ಆಯ್ಕೆಯಾದ ಫಲಾನುಭವಿಗಳಿಗೆ ಕಾರ್ಯಾದೇಶ ನೀಡುವುದು.

 

III. ಉಪ ಕೃಷಿ ನಿರ್ದೇಶಕರು:
1. ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೈತ ಉತ್ಪಾದಕ ಕೇಂದ್ರಗಳು/ಸ್ವಸಹಾಯ ಗುಂಪುಗಳಿಗೆ ಚಟುವಟಿಕೆ ಕೈಗೊಳ್ಳಲು ಪ್ರೇರೇಪಿಸುವುದು.
2. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಮಯೋಚಿತವಾಗಿ ಯೋಜನೆಗಳ ಒಗ್ಗೂಡಿಸುವಿಕೆಗೆ ಕ್ರಮಕೈಗೊಳ್ಳುವುದು.
3. ಆಯ್ಕೆಯಾದ ಫಲಾನುಭವಿಗಳ ಸ್ಥಳ ಪರಿಶೀಲನೆ ಮಾಡಿ ವರದಿ ನೀಡುವುದು (10%). ಅನುಮೋದನೆಗೊಂಡ ಚಟುವಟಿಕೆಗಳ ಬಿಲ್ಲುಗಳಿಗೆ ಮೇಲುಸಹಿಗೊಳಿಸಿ ಅನುದಾನ ಬಿಡುಗಡೆ  ಮಾಡುವುದು.

IV. ಜಂಟಿ ಕೃಷಿ ನಿರ್ದೇಶಕರು 

1. ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಸ್ಥಳೀಯ ಅವಶ್ಯಕತೆಗನುಗುಣವಾಗಿ ಜಿಲ್ಲಾ ಮಟ್ಟದ ಕ್ರಿಯಾ ಯೋಜನೆ ಸಿದ್ದಪಡಿಸಲು ಕ್ರಮವಹಿಸುವುದು.
2. ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎರಡುತಿಂಗಳಿಗೊಮ್ಮೆ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ಸಭೆ ನಡೆಸಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲಿಸಲು ಕ್ರಮಕೈಗೊಳ್ಳುವುದು.
3. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಮಯೋಚಿತವಾಗಿ ಯೋಜನೆಗಳ ಒಗ್ಗೂಡಿಸುವಿಕೆಗೆ ಕ್ರಮಕೈಗೊಳ್ಳುವುದು.
4. ಜಿಲ್ಲಾವಾರು ಸೆಕೆಂಡರಿ ಕೃಷಿಗೆ ಸೂಕ್ತವಿರುವ ಚಟುವಟಿಕೆಗಳನ್ನು ಗುರುತಿಸಲು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸೂಕ್ತ ಸಂಸ್ಥೆಯನ್ನು ಆಯ್ಕೆ ಮಾಡಿ ಸದರಿ ಕಾರ್ಯವನ್ನು ಕೈಗೊಂಡು ವರದಿ ಸಲ್ಲಿಸುವುದು.
5. ಚಟುವಟಿಕೆಗಳ ಅನುಷ್ಠಾನದ ಮೌಲ್ಯಮಾಪನಕ್ಕಾಗಿ ಮೂರು ವರ್ಷದವರೆಗೆ ಆಯ್ಕೆಯಾದ ಫಲಾನುಭವಿಗಳ ಸ್ಥಳ ಪರಿಶೀಲನೆಯನ್ನು ಕೈಗೊಂಡು ವರದಿ ನೀಡುವುದು (5%).
6. ತಮ್ಮ ಅಧೀನ ಕಛೇರಿಗಳಿಗೆ ಅನುದಾನ ಬಿಡುಗಡೆ ಮಾಡುವುದಲ್ಲದೇ ಭೌತಿಕ ಗುರಿಗಳನ್ನು ನೀಡುವುದು.

 

v) ರಾಜ್ಯ ಮಟ್ಟದ ಸೆಕೆಂಡರಿ ಕೃಷಿ ನಿರ್ದೇಶನಾಲಯ:

1. ಸೆಕೆಂಡರಿ ಕೃಷಿ ವಲಯದಲ್ಲಿ ಸಾಧಿಸಬೇಕಾದ ವಿವಿಧ ಕಾರ್ಯಚಟುವಟಿಕೆಗಳನ್ನು ಗುರುತಿಸುವುದು
2. ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ, ಹುಲ್ಲುಗಾವಲು, ಅರಣ್ಯ ಮತ್ತು ಇತರೆ ಉಪವಲಯಗಳಲ್ಲಿ ಲಭ್ಯವಿರುವ ವಿವಿಧ ಉತ್ಪನ್ನಗಳ (ಪ್ರಾಥಮಿಕ ಹಾಗೂ ಉಪ ಉತ್ಪನ್ನ) ಪ್ರಮಾಣದ ಮೌಲ್ಯಮಾಪನ ಮಾಡುವುದು.
3. ಸೆಕೆಂಡರಿ ಕೃಷಿಗೆ ಸಂಬಂಧಿಸಿದ, ಕೃಷಿ ಮತ್ತು ಸಂಬಂಧಿತ ಇಲಾಖೆಗಳಡಿ ಚಾಲ್ತಿಯಲ್ಲಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಒಗ್ಗೂಡಿಸುವಿಕೆಯಲ್ಲಿ ಅನುಷ್ಠಾನ ಮಾಡುವುದು.
4. ಪ್ರಾಥಮಿಕ ಮತ್ತು ಸೆಕೆಂಡರಿ ಸಂಸ್ಕರಣೆಯನ್ನು ಉತ್ತೇಜಿಸಲು ಅಗತ್ಯವಿರುವ ಕೌಶಲ್ಯಗಳನ್ನು ಗುರುತಿಸುವುದು ಮತ್ತು ಅವಶ್ಯಕತೆಗನುಗುಣವಾದ ತರಬೇತಿ, ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡುವುದು.
5. ಸೆಕೆಂಡರಿ ಉತ್ಪನ್ನಗಳಿಗೆ ಪ್ರತ್ಯೇಕ ಮಾರುಕಟ್ಟೆ/ ಸಂಪರ್ಕ ಕಲ್ಪಿಸಲು ಪರ್ಯಾಯ ಮಾರ್ಗಗಳನ್ನು ಗುರುತಿಸುವುದು.
6. ಉತ್ಪನ್ನಗಳ ಗುಣಮಟ್ಟವನ್ನು ಅಭಿವೃದ್ಧಿಪಡಿಸಲು ಮಾನದಂಡಗಳನ್ನು ನಿಗಧಿಪಡಿಸುವುದು, ಗುಣಮಟ್ಟ ನಿಯಂತ್ರಣ ಸೌಲಭ್ಯಗಳು, ಭೌಗೋಳಿಕ ಸೂಚ್ಯಂಕ ಉತ್ಪನ್ನಗಳ ಅಭಿವೃದ್ಧಿ ಇತ್ಯಾದಿ ಮೂಲಕ ಸೆಕೆಂಡರಿ ಕೃಷಿ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ವೇದಿಕೆ / ವ್ಯವಸ್ಥೆ ಕಲ್ಪಿಸುವುದು.
7. ಸೆಕೆಂಡರಿ ಕೃಷಿಗೆ ಸಂಬಂಧಿಸಿದಂತೆ ಜಿಲ್ಲಾವಾರು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಮಾರ್ಗದರ್ಶನ ನೀಡುವುದು.
8. ಸೆಕೆಂಡರಿ ಕೃಷಿಗೆ ಸಂಬಂಧಿಸಿದಂತೆ ಮೇಲಿನ ಎಲ್ಲಾ ಯೋಜನೆಗಳನ್ನು ಸಂಯೋಜಿಸಿ ರಾಜ್ಯಮಟ್ಟದ ಸಮಗ್ರ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವುದು.
9. ಸಮಗ್ರ ಕ್ರಿಯಾ ಯೋಜನೆಯ ಪ್ರಗತಿಯ ಮೇಲ್ವಿಚಾರಣೆ ಮತ್ತು ಪ್ರಗತಿ ಪರಿಶೀಲನೆ ಮಾಡುವುದು. ಕ್ರಿಯಾ ಯೋಜನೆಯ ಮಧ್ಯಂತರ ತಿದ್ದುಪಡಿಮಾಡಲು ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಮಾರ್ಗದರ್ಶನ ನೀಡುವುದು.
10. ಸೆಕೆಂಡರಿ ಕೃಷಿಯ ಉದ್ದೇಶಗಳಿಗನುಗುಣವಾಗಿ ಹೊಸ ಕಾರ್ಯತಂತ್ರಗಳು, ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಸೂಚಿಸುವುದು.

 

Vi. ರಾಜ್ಯ ಮಟ್ಟದ ವಿವಿಧ ಇಲಾಖೆಗಳು:

1. ನಿರ್ದೇಶನಾಲಯದ ತಾಂತ್ರಿಕ ತಂಡಕ್ಕೆ ಪ್ರತಿ ಇಲಾಖೆಯಿಂದ ಒಬ್ಬ ನೋಡಲ್ ಅಧಿಕಾರಿಯನ್ನು ನಿಯೋಜಿಸುವುದು
2. ಜಿಲ್ಲಾವಾರು  ಸೆಕೆಂಡರಿ ಚಟುವಟಿಕೆಗಳನ್ನು ಗುರುತಿಸಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ಸಹಯೋಗದೊಂದಿಗೆ ವರದಿ ತಯಾರಿಸಲು ಅನುವು ಮಾಡುವುದು ಹಾಗೂ ವ್ಯಾಪಕ ಪ್ರಚಾರ ನೀಡುವುದು.
3. ಇಲಾಖೆಯಲ್ಲಿ ಒಗ್ಗೂಡಿಸುವಿಕೆಯಡಿ ಕಾರ್ಯಕ್ರಮಗಳನ್ನು ಸೆಕೆಂಡರಿ ಕೃಷಿ ಜೊತೆ ಸಂಯೋಜಿಸುವುದು.

     

5.11 ಉಸ್ತುವಾರಿ ಮತ್ತು ಮೌಲ್ಯಮಾಪನ:

ಅ) ಜಿಲ್ಲಾ ಮಟ್ಟದ ಆಯಾ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮ ಅನುಷ್ಠಾನದ ಉಸ್ತುವಾರಿಯನ್ನು  ನಿಯತಕಾಲಿಕವಾಗಿ ಮಾಡಿ ಕ್ರೋಢಿಕೃತ ವರದಿಯನ್ನು ಸಲ್ಲಿಸುವುದು.    

   ಆ) ರಾಜ್ಯ ಸೆಕೆಂಡರಿ ಕೃಷಿ ನಿರ್ದೇಶನಾಲಯದಿಂದ  ಆಯಾ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮ ಅನುಷ್ಠಾನದ ಉಸ್ತುವಾರಿಯನ್ನು ನಿಯತಕಾಲಿಕವಾಗಿ ಮಾಡಿ ಕ್ರೋಡಿಕೃತ ವರದಿಯನ್ನು ಸಲ್ಲಿಸುವುದು .

ಇ) ಈ ಯೋಜನೆಯ ಮುಖ್ಯ ಉದ್ದೇಶವು ಲಿತಾಂಶ ಆಧಾರಿತವಾಗಿರುವುದರಿಂದ ಆರ್ಥಿಕ ವರ್ಷದ ಅಂತ್ಯದಲ್ಲಿ ಫಲಾನುಭವಿಗಳ ವಿವರ ಮತ್ತು ಯಶೋಗಾಥೆಯೊಂದಿಗೆ ಕಿರುಹೊತ್ತಿಗೆ (Compendium)ಯನ್ನು  ಹಾಗೂ Video Documentary ಯನ್ನು ಕಡ್ಡಾಯವಾಗಿ ಸಲ್ಲಿಸುವುದು.

 

(ಈ) ಯೋಜನಾ ಅನುಷ್ಠಾನದ ಒಂದು ವರ್ಷದಿಂದ ಮೂರು ವರ್ಷದವರೆಗೆ ಚಟುವಟಿಕೆಯ ಯಶಸ್ಸಿನ ಮೌಲ್ಯಮಾಪನವನ್ನು ಸಂಬಂಧಿತ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ವರ್ಷವಾರು ಕ್ಷೇತ್ರ ತಪಾಸಣೆಯನ್ನು ಕೈಗೊಂಡು, ದಾಖಲಾತಿಗಳನ್ನು ಪರಿಶೀಲಿಸಿ ವರದಿಯನ್ನು ನಿರ್ದೇಶನಾಲಯಕ್ಕೆ ಸಲ್ಲಿಸುವುದು

5.12 ಸೆಕೆಂಡರಿ ಕೃಷಿ ಗೆ ಸಂಬಂಧಿಸಿದಂತೆ ಇತರೆ ಮಾಹಿತಿಗಳು:

1. ಸೆಕೆಂಡರಿ ಕೃಷಿ ನಿರ್ದೇಶನಾಲಯದ ಸ್ಥಾಪನೆ, ಪ್ರಚಾರ ಮತ್ತು ವರದಿ ತಯಾರಿಕೆಗೆ ಆಡಳಿತ ವೆಚ್ಚದ ಅವಶ್ಯಕತೆ ಇರುತ್ತದೆ. ಅಲ್ಲದೇ, ಕೃಷಿ ನಿರ್ದೇಶಕರ ವೇತನ, ಕಛೇರಿ ವೆಚ್ಚ, ರಾಜ್ಯ ಮಟ್ಟದ ಕಾರ್ಯಾಗಾರ, ಇಂಧನ ವೆಚ್ಚ ಹಾಗೂ ಕಾರ್ಯಕ್ರಮದ ಪೂರಕ ಚಟುವಟಿಕೆಗಳನ್ನು ಒಳಗೊಂಡಿರುತ್ತದೆ.
2. ಸೆಕೆಂಡರಿ ಕೃಷಿಡಿಯಲ್ಲಿ ಫಲಾನುಭವಿಗಳು ಆದ್ಯತೆ ನೀಡಿ ಇಚ್ಚಿಸಿದ ಯಂತ್ರೋಪಕರಣ/ ಉಪಕರಣಗಳನ್ನು  ಖರೀದಿಸಲು ಪರಿಗಣಿಸುವುದು.

]]>
Mon, 02 Jun 2025 18:27:13 +0530 shivuagrico
Gruhalakshmi pending amount&ಈ ಪಟ್ಟಿಯಲ್ಲಿರುವವರಿಗೆ ವಾರದೆೊಳಗೆ ಜಮಾ ಆಗಲಿದೆ ಗೃಹಲಕ್ಷ್ಮಿ ಹಣ https://krushirushi.in/Gruhalakshmi-pending-amount-2138 https://krushirushi.in/Gruhalakshmi-pending-amount-2138 Gruhalakshmi pending amount-ಈ ಪಟ್ಟಿಯಲ್ಲಿರುವವರಿಗೆ ವಾರದೆೊಳಗೆ ಜಮಾ ಆಗಲಿದೆ ಗೃಹಲಕ್ಷ್ಮಿ ಹಣ

 ಕಳೆದ ಎರಡು ತಿಂಗಳಿಂದ ಗೃಹ ಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ನೀಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯದಲ್ಲೇ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪಲಿದೆ ಎಂದು ಹೇಳಿದ್ದಾರೆ. ಈಗಾಗಲೇ ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ನೀಡಲಾಗಿದ್ದು, ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಹಣವನ್ನು ಕೂಡ ಈಗಾಗಲೇ ಬಿಲ್ ಮಾಡಲಾಗಿದೆ ಎಂದಿದ್ದಾರೆ. 


ಇನ್ನು ಮಹಿಳೆಯರಿಗೆ 2000/- ನೀಸುವ ಗೃಹಲಕ್ಷ್ಮಿ ಯೋಜನೆಯ ಹಣ ಎರಡು ತಿಂಗಳಿಂದ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ ಎಂಬ ಮಾಹಿತಿಯಿದೆ. ಆದ್ರೆ ಮಾರ್ಚ್ ಆರ್ಥಿಕ ವರ್ಷದ ಕೊನೆಯಾಗಿರುವ ಕಾರಣ ಸ್ವಲ್ಪ ಹೆಚ್ಚು ಕಮ್ಮಿಯಾಗಿದೆ. ಆದ್ರೆ ಕೆಲವೇ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ. ಆದಷ್ಟು ಬೇಗ, ಬಹುತೇಕ ಇನ್ನೊಂದು ವಾರದಲ್ಲಿ ಮಹಿಳೆಯರಿಗೆ ಹಣ ಹಾಕಲಿದ್ದೇವೆ ಎಂದಿದ್ದಾರೆ.

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Mon, 02 Jun 2025 07:16:34 +0530 shivuagrico
Free Aadhar update last date&ಉಚಿತ ಆಧಾರ್ ಅಪ್ಡೇಟ್ ಗೆ ಕೊನೆಯ ದಿನಾಂಕ,ಇಲ್ಲದಿದ್ದರೆ ದಂಡ ಫಿಕ್ಸ್,ಹೀಗೆ ಮಾಡಿ ನಿಮ್ಮ ಆಧಾರ್ ಅಪ್ಡೇಟ್ https://krushirushi.in/Free-Aadhar-update-last-date-2137 https://krushirushi.in/Free-Aadhar-update-last-date-2137 Free Aadhar update last date-ಉಚಿತ ಆಧಾರ್ ಅಪ್ಡೇಟ್ ಗೆ ಕೊನೆಯ ದಿನಾಂಕ,ಇಲ್ಲದಿದ್ದರೆ ದಂಡ ಫಿಕ್ಸ್,ಹೀಗೆ ಮಾಡಿ ನಿಮ್ಮ ಆಧಾರ್ ಅಪ್ಡೇಟ್

ಈ ಮೊದಲು ಆಧಾರ್​ಗೆ ಸಂಬಂಧಿತ ಮಾಹಿತಿ ಅಪ್​ಲೋಡ್​ ಮಾಡಿಕೊಳ್ಳಲು ಈ ಮೊದಲು ಡಿಸೆಂಬರ್ 14 ಕೊನೆಯ ದಿನವಾಗಿತ್ತು, ಈಗ ಜೂನ್ 14ರವರೆಗೆ ಅವಧಿ ವಿಸ್ತರಿಸಲಾಗಿದ್ದು,ಆನ್​ಲೈನ್​ನಲ್ಲಿ ಉಚಿತವಾಗಿ ಆಧಾರ್​ ಅಪ್​ಡೇಟ್​ ಮಾಡಿಕೊಳ್ಳಿ

ನೀವು ಆಧಾರ್​ ಸಂಖ್ಯೆ ಪಡೆದು ಹತ್ತು ವರ್ಷಗಳಾಗಿದ್ದಲ್ಲಿ ಹಾಗೂ ಇದುವರೆಗೂ ಯಾವುದೇ ಮಾಹಿತಿ ಅಪ್​ಡೇಟ್ ಮಾಡಿಕೊಂಡಿರದಿದ್ದಲ್ಲಿ ಈ ಅವಕಾಶವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಅಂದಹಾಗೆ ಇದು ಡೆಮೊಗ್ರಫಿಕ್​ ಡೇಟಾಗಷ್ಟೇ ಸೀಮಿತವಾಗಿರಲಿದೆ ಎಂದು ಯುಐಡಿಎಐ ತಿಳಿಸಿದೆ.

ಈ ಅಪ್​ಡೇಟ್​ಗೆ ಆಧಾರ್​ ಗ್ರಾಹಕ ಸೇವಾ ಕೇಂದ್ರದಲ್ಲಿ 50 ರೂ. ಶುಲ್ಕ ವಿಧಿಸಲಾಗುತ್ತಿದೆ. ಆದರೆ ಆನ್​ಲೈನ್​ನಲ್ಲಿ ಉಚಿತವಾಗಿ ಮಾಡಿಕೊಳ್ಳಲು ಅವಕಾಶವಿದ್ದು,ಹತ್ತು ವರ್ಷಗಳ ಹಿಂದೆ ಆಧಾರ್​ ಪಡೆದವರು ತಮ್ಮ ಇತ್ತೀಚಿಗಿನ ಗುರುತು, ವಾಸದ ವಿಳಾಸ ಇತ್ಯಾದಿ ಮಾಹಿತಿಗಳನ್ನು ಜೂನ್ 14ರ ಒಳಗೆ ಉಚಿತವಾಗಿ ಅಪ್​​ಡೇಟ್ ಮಾಡಿಕೊಳ್ಳಬಹುದು.

ಅಲ್ಲದೆ ಡೆಮೊಗ್ರಫಿಕ್ ಡೇಟಾ ಅಂದರೆ, ಹೆಸರು, ವಿಳಾಸ, ಜನ್ಮದಿನಾಂಕ, ಲಿಂಗ, ಮೊಬೈಲ್​ಫೋನ್​ ನಂಬರ್, ಇ-ಮೇಲ್ ಐಡಿ ವಿವರಗಳನ್ನು ಅಪ್​ಡೇಟ್ ಮಾಡಿಕೊಳ್ಳಬಹುದು.

Free Aadhaar update-ಉಚಿತವಾಗಿ ಆಧಾರ್ ಅಪ್ಡೇಟ್ ಮಾಡುವ ಡೈರೆಕ್ಟ್ ಲಿಂಕ್

https://myaadhaar.uidai.gov.in/

ಮೊದಲು ಮುಖಪುಟದಲ್ಲಿರುವ login ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,Captcha type ಮಾಡಿ, send OTP ಮೇಲೆ ಕ್ಲಿಕ್ ಮಾಡಿ

ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Login ಮೇಲೆ ಕ್ಲಿಕ್ ಮಾಡಿ

ನಂತರ Document update ಮೇಲೆ ಕ್ಲಿಕ್ ಮಾಡಿ

ನಂತರ Next ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ Next ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ Next ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ POI ಅಂದರೆ ನಿಮ್ಮ ಗುರುತಿನ ಚೀಟಿಯಾಗಿ ಪ್ಯಾನ್ ಕಾರ್ಡ್ ಅಥವಾ ಯಾವುದಾದರು ಗುರುತಿನ ಚೀಟಿಯನ್ನು ಹಾಗೂ POA ಅಂದರೆ ನಿಮ್ಮ ವಿಳಾಸದ ಪುರಾವೆಯನ್ನು select ಮಾಡಿ ನಿಮ್ಮ passport ಅಥವಾ ಯಾವುದಾದರೂ ವಿಳಾಸದ ಪುರಾವೆಯ ಫೋಟೊವನ್ನು ಅಪ್ಲೋಡ್ ಮಾಡಿ,Next ಮೇಲೆ ಕ್ಲಿಕ್ ಮಾಡಿ

ಸೂಚನೆ:ನೀವು ಅಪ್ಲೋಡ್ ಮಾಡುವ ಫೋಟೊ 2MB ಗಿಂತ ಮೇಲೆ ಇರಬೇಕು.

ನಂತರ Okay ಮೇಲೆ ಕ್ಲಿಕ್ ಮಾಡಿ

ನಂತರ submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ಅಪ್ಡೇಟ್ ಆಗಿ,Success ಎಂದು ತೋರಿಸುತ್ತದೆ.

ನಂತರ Download acknowledgment ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮಗೆ Acknowledgment ದೊರೆಯುತ್ತದೆ

]]>
Sun, 01 Jun 2025 13:36:06 +0530 shivuagrico
Unseasonal rains&ಅವಧಿ ಪೂರ್ವ ಅಕಾಲಿಕ ಮಳೆ,ಈಗ ಬಿಸಿಲು,ಮುಂದೇನು? https://krushirushi.in/Unseasonal-rains-2136 https://krushirushi.in/Unseasonal-rains-2136

Unseasonal rains-ಅವಧಿ ಪೂರ್ವ ಅಕಾಲಿಕ ಮಳೆ,ಈಗ ಬಿಸಿಲು,ಮುಂದೇನು?

ಮೇ ತಿಂಗಳು ಎಂದರೆ, ಸಾಮಾನ್ಯವಾಗಿ ವಿಪರೀತ ಬಿಸಿಲು ಇರುತ್ತದೆ. ಆದರೆ, ಕೆಲವು ವರ್ಷಗಳಿಂದ ಪರಿಸ್ಥಿತಿ ಬದಲಾಗಿದೆ. ಈ ವರ್ಷದ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದಂತೆ ಕಾಣುತ್ತಿದ್ದು, ಆಗಿಂದಾಗ್ಗೆ ಭಾರಿ ಮಳೆ ಬೀಳುತ್ತಲೇ ಇದೆ. ಮಳೆಗಾಲದಲ್ಲೂ ಅಪರೂಪ ಎನ್ನುವಂಥ ಮಳೆ ಮುಂಗಾರು ಆಗಮನಕ್ಕೂ ಮುನ್ನವೇ ಸುರಿಯುತ್ತಿದೆ. ಮಳೆಗೆ ಪೂರ್ವಸಿದ್ಧತೆ ಇಲ್ಲದಿದ್ದಕ್ಕೆ ಮತ್ತು ಮೂಲಸೌಕರ್ಯಗಳ ಕೊರತೆಯ ಕಾರಣಕ್ಕೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಪ್ರದೇಶಗಳು ಹೊಳೆಯಂತಾಗಿವೆ.

ಮಳೆಗಾಲದಲ್ಲಿ ಬೆಂಗಳೂರಿನ ರಸ್ತೆಗಳಲ್ಲಿ ಪ್ರವಾಹ ಉಂಟಾಗುವುದು ಇತ್ತೀಚಿನ ವರ್ಷಗಳಲ್ಲಿ ಸಾಮಾನ್ಯವಾದ ವಿದ್ಯಮಾನವಾಗಿತ್ತು. ಆದರೆ, ಈ ಬಾರಿ ಮುಂಗಾರುಪೂರ್ವದಲ್ಲೇ ಈ ಪರಿಸ್ಥಿತಿ ತಲೆದೋರಿದ್ದು, ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುವಂತೆ ಮಾಡಿದೆ. ಕರ್ನಾಟಕ ಅಷ್ಟೇ ಅಲ್ಲದೇ, ದಖ್ಖನ್‌ ಪ್ರಸ್ಥಭೂಮಿ ವ್ಯಾಪ್ತಿಯ ಕೇರಳ, ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲೂ ಅಕಾಲಿಕ ಮಳೆ ಸುರಿದು, ಸಮಸ್ಯೆಗಳು ಸೃಷ್ಟಿಯಾಗಿವೆ. ಉತ್ತರದ ದೆಹಲಿ, ಗುಜರಾತ್, ಉತ್ತರ ಪ್ರದೇಶ, ರಾಜಸ್ಥಾನ, ಜಾರ್ಖಂಡ್,  ಮುಂತಾದೆಡೆ ಕೂಡ ಇದೇ ಪರಿಸ್ಥಿತಿ ತಲೆದೋರಿದೆ.

ಮುಂಗಾರುಪೂರ್ವದಲ್ಲಿ ಆಗೀಗ ಮಳೆ ಸುರಿಯುವುದು ಹೊಸದೇನಲ್ಲ. ಬೇಸಿಗೆಯಲ್ಲಿ ಮಳೆಯಾಶ್ರಿತ ಕೃಷಿ ಚಟುವಟಿಕೆ ಆರಂಭಕ್ಕೆ ಮುಂಗಾರು ಪೂರ್ವ ಮಳೆಯೂ ಮುಖ್ಯ. ಆದರೆ, ನಿರಂತರವಾಗಿ ಸುರಿಯುವುದು, ಅದೂ ಮೇಘ ಸ್ಫೋಟವಾದಂತೆ ಭಾರಿ ಪ್ರಮಾಣದಲ್ಲಿ ಮಳೆಯಾಗುವುದು ಹೊಸ ವಿದ್ಯಮಾನವಾಗಿದೆ.

ಇದು ಮಳೆಯ ಕಥೆಯಾದರೆ, ಬಿಸಿಲಿನದ್ದು ಇನ್ನೊಂದು ಕಥೆ. ಸರಿಯಾಗಿ ವರ್ಷದ ಹಿಂದೆ, 2024ರ ಮೇನಲ್ಲಿ, ದೇಶದ 37 ನಗರಗಳಲ್ಲಿ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ಅನ್ನು ದಾಟಿತ್ತು. ರಾಜಸ್ಥಾನದ ಚುರು ಎಂಬಲ್ಲಿ 50.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಬಿಸಿಲಿನ ಹೊಡೆತಕ್ಕೆ ಜನ ತತ್ತರಿಸಿದ್ದಲ್ಲದೇ, ಜೀವನೋಪಾಯಕ್ಕೂ ಪೆಟ್ಟು ಬಿದ್ದಿತ್ತು. ಅನೇಕ ಭಾಗಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿತ್ತು. ಮಹಾರಾಷ್ಟ್ರ ಸೇರಿದಂತೆ ಹಲವೆಡೆ ಬಿಸಿಗಾಳಿಯಿಂದಾಗಿ ಸಾರ್ವಜನಿಕ ಸಭೆಗಳನ್ನು ನಿಷೇಧಿಸಲಾಗಿತ್ತು. ಏಪ್ರಿಲ್‌ನಿಂದ ಜೂನ್‌ವರೆಗೆ ದೇಶದ ವಿವಿಧ ಭಾಗಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶದಲ್ಲಿ ವ್ಯತ್ಯಾಸವಾಗಲಿದ್ದು, ಬಿಸಿಗಾಳಿಯ ಅವಧಿ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿತ್ತು. ಈ ಬಾರಿಯ ಹವಾಮಾನ ಇಲಾಖೆಯ ದೀರ್ಘಾವಧಿ ಮುನ್ಸೂಚನೆ (ಎಲ್‌ಆರ್‌ಎಫ್‌) ಪ್ರಕಾರ, ಇದೇ ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ವಾಡಿಕೆಗಿಂತ ಹೆಚ್ಚು ಮಳೆ (ಶೇ 105ರಷ್ಟು) ಬೀಳಲಿದೆ. 

ಒಂದೆಡೆ, ಬಿಸಿಲು ತಾರಕಕ್ಕೇರಿ ವಿಪರೀತ ಎನ್ನುವಷ್ಟು ಬಿಸಿಗಾಳಿ ಬೀಸುವುದು. ಮತ್ತೊಂದೆಡೆ, ಪ್ರವಾಹ ಉಂಟಾಗುವಂತೆ ಅಕಾಲಿಕವಾಗಿ ಮಳೆ ಸುರಿಯುವುದು. ಕೆಲವೇ ಗಂಟೆಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆ ಸುರಿಯುವುದು... ಇವು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಎನ್ನುವಂತಾಗಿವೆ. ಪ್ರಕೃತಿ ವೈಪರೀತ್ಯಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ ಮತ್ತು ತೀವ್ರವಾಗುತ್ತಿವೆ. ಕೆಲವು ಪ್ರದೇಶಗಳಲ್ಲಿ ಬಿಸಿಲಿನ ಅವಧಿ ಹೆಚ್ಚಾಗಿರುತ್ತದೆ. ಕೆಲವು ಪ್ರದೇಶಗಳಲ್ಲಿ ಮುಂಗಾರಿಗೂ ಮುನ್ನವೇ ಮಳೆ ಸುರಿಯಲಾರಂಭಿಸುತ್ತದೆ. ವರ್ಷದಿಂದ ವರ್ಷಕ್ಕೆ ಹವಾಮಾನ ವ್ಯವಸ್ಥೆಯು ಸಂಕೀರ್ಣಗೊಳ್ಳುತ್ತಿದ್ದು, ಅದರ ಗತಿಯನ್ನು ಅರಿಯುವುದೇ ಕಷ್ಟವಾಗಿದೆ.   

ಜಾಗತಿಕ ತಾಪಮಾನ ಏರಿಕೆಯನ್ನು ಕೈಗಾರಿಕಾ ಪೂರ್ವ ಅವಧಿಯಲ್ಲಿ ಇದ್ದುದಕ್ಕಿಂತ 1.5 ಡಿಗ್ರಿ ಸೆಲ್ಸಿಯಸ್ ಹೆಚ್ಚಳಕ್ಕೆ ಸೀಮಿತಗೊಳಿಸುವುದು ಪ್ಯಾರಿಸ್ ಒಪ್ಪಂದದ ಮುಖ್ಯ ನಿರ್ಣಯವಾಗಿತ್ತು. ಆದರೆ, 2024 ಜಾಗತಿಕವಾಗಿ ಅತಿ ತಾಪಮಾನದ ವರ್ಷವಾಗಿ ದಾಖಲೆ ಮಾಡಿದ್ದು ಅಷ್ಟೇ ಅಲ್ಲದೇ, 1.5 ಡಿಗ್ರಿ ಸೆಲ್ಸಿಯಸ್ ಮಿತಿಯನ್ನೂ ದಾಟಿತ್ತು. 

ಹವಾಮಾನ ಬದಲಾವಣೆ:

ತಾಪಮಾನದ ‌‌‌ಏರಿಕೆ, ಅಕಾಲಿಕ ಮಳೆ ಇವೆಲ್ಲವೂ ಹವಾಮಾನ ಬದಲಾವಣೆಯ ಪರಿಣಾಮಗಳು. 2025ರ ಫೆಬ್ರುವರಿ/ಮಾರ್ಚ್ ಆರಂಭದಲ್ಲೇ ಭಾರತದ ಕೆಲವು ಭಾಗಗಳಲ್ಲಿ ಬಿಸಿಗಾಳಿ ಬೀಸುವ ಮೂಲಕ ಹವಾಮಾನ ವೈಪರೀತ್ಯದ ಸುಳಿವು ನೀಡಿತ್ತು. ಬಿಸಿಲು ಮತ್ತು ಬಿಸಿಗಾಳಿ ದೀರ್ಘವಾಗುತ್ತಿರುವ ವಿದ್ಯಮಾನ ದೇಶದಲ್ಲಿ ಹೊಸದೇನಲ್ಲ. 20ನೇ ಶತಮಾನದ ನಂತರ ಸುಮಾರು 0.8 ಡಿಗ್ರಿ ಸೆಲ್ಸಿಯಸ್‌ನಷ್ಟು ಸರಾಸರಿ ತಾಪಮಾನ ಹೆಚ್ಚಾಗಿದೆ. ಮೇಲ್ಮೈ ಮತ್ತು ವಾಯುಮಂಡಲದ ಉಷ್ಣಾಂಶದಿಂದ ಬೇಸಿಗೆಯ ತಾಪ ಹೆಚ್ಚಾಗುತ್ತಿರುವುದಷ್ಟೇ ಅಲ್ಲ, ವಾಯುಮಂಡಲದ ತೇವಾಂಶ ಒಯ್ಯುವ ಸಾಮರ್ಥ್ಯವನ್ನೂ ಹೆಚ್ಚಿಸುತ್ತದೆ. ವಾತಾವರಣದಲ್ಲಿನ ಹೆಚ್ಚಿನ ತೇವಾಂಶವು ತೀವ್ರ ಹಾಗೂ ಅಕಾಲಿಕ ಮಳೆ ಉಂಟುಮಾಡುತ್ತಿದೆ.

ದೇಶದಲ್ಲಿ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಿದೆ. ಕಳೆದ 50 ವರ್ಷದಲ್ಲಿ ದೇಶದಲ್ಲಿ ಹವಾಮಾನ ವೈಪರೀತ್ಯ ಹೆಚ್ಚಾಗಿದೆ. ಮುಂದಿನ 50 ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಾಗಲಿದೆ ಎನ್ನಲಾಗುತ್ತಿದೆ. ಹಿಂದೆ, ಉತ್ತರದ ಕೆಲವು ರಾಜ್ಯಗಳಲ್ಲಿ ಮಾತ್ರ ಬಿಸಿಗಾಳಿ ಬೀಸುತ್ತಿತ್ತು. 20 ವರ್ಷಗಳಿಂದೀಚೆಗೆ, ಅದರ ವ್ಯಾಪ್ತಿ ವಿಸ್ತರಿಸಿದ್ದು, ಆಂಧ್ರ ಪ್ರದೇಶ, ತೆಲಂಗಾಣ, ಒಡಿಶಾ ರಾಜ್ಯಗಳೂ ಆ ಪಟ್ಟಿ ಸೇರಿವೆ. ಹಾಗೆಯೇ ಬಿಸಿಗಾಳಿಗೆ ಹೆಸರಾಗಿದ್ದ ಉತ್ತರದ ಹಲವು ರಾಜ್ಯಗಳಲ್ಲೂ ಪ್ರವಾಹಗಳು ಘಟಿಸುತ್ತಿವೆ. 

ಅಕಾಲಿಕ ಮಳೆ, ತಾಪಮಾನ ಹೆಚ್ಚಳ, ಪ್ರವಾಹ, ಬಿಸಿಗಾಳಿ, ಮೇಘ ಸ್ಫೋಟ ಎಲ್ಲಕ್ಕೂ ಹವಾಮಾನ ಬದಲಾವಣೆ ಕಾರಣವಾಗಿದ್ದು, ಅದಕ್ಕೆ ಪರಿಹಾರ ಕಂಡುಕೊಳ್ಳದಿದ್ದರೆ, ಭವಿಷ್ಯದಲ್ಲಿ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. 

ವರ್ಷದಿಂದ ವರ್ಷಕ್ಕೆ ಹೆಚ್ಚು ವರ್ಷಧಾರೆ

ರಾಜ್ಯದಲ್ಲಿ ಮಾರ್ಚ್‌ 1ರಿಂದ ಮೇ 31ರ ನಡುವೆ ವಾಡಿಕೆಯಲ್ಲಿ 11.96 ಸೆಂ.ಮೀ. ಮಳೆಯಾಗುತ್ತದೆ. 2021ರಿಂದೀಚೆಗೆ ಪ್ರತಿ ವರ್ಷವೂ (2023 ಹೊರತು ಪಡಿಸಿ‌) ಹೆಚ್ಚು ಮಳೆಯಾಗುತ್ತಿದೆ. ಈ ವರ್ಷ ಮೇ ಮುಕ್ತಾಯವಾಗಲು ಇನ್ನೂ ಐದು ದಿನಗಳು ಬಾಕಿ ಇವೆ. ಈಗ ಮುಂಗಾರು ಕಾಲಿಡುತ್ತಿದೆ. ಆದರೆ, ಈಗಾಗಲೇ ವಾಡಿಕೆಗಿಂತಲೂ ಹೆಚ್ಚು ವರ್ಷಧಾರೆಯಾಗಿದೆ. ಮೇ 24ರವರೆಗೆ 19.4 ಸೆಂ.ಮೀನಷ್ಟು ಮಳೆ ಬಿದ್ದಿದೆ. ಮಾರ್ಚ್‌, ಏಪ್ರಿಲ್‌ಗೆ ಹೋಲಿಸಿದರೆ ಮೇ ತಿಂಗಳ ಎರಡನೇ ವಾರದ ನಂತರ ಭಾರಿ ಮಳೆ ಸುರಿದಿದೆ.     

ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಪ್ರದೇಶ ಸೇರಿದಂತೆ ನಾಲ್ಕೂ ವಲಯಗಳಲ್ಲಿ ಮಳೆ ಜಾಸ್ತಿಯಾಗುತ್ತಿದೆ. ಈ ಬಾರಿ ಕರಾವಳಿಯಲ್ಲಿ ಶೇ 216ರಷ್ಟು ಹೆಚ್ಚು ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ 33.91 ಸೆಂ.ಮೀನಷ್ಟು (ವಾಡಿಕೆ 10.74 ಸೆಂ.ಮೀ) ಮಳೆ ಸುರಿದಿದೆ. ಮಲೆನಾಡು ಭಾಗದಲ್ಲಿ 23.74 ಸೆಂ.ಮೀ ಮಳೆಯಾಗಿದೆ (ಶೇ 76ರಷ್ಟು ಹೆಚ್ಚು). ದಕ್ಷಿಣ ಒಳನಾಡಿನಲ್ಲಿ 20 ಸೆಂ.ಮೀ ಮತ್ತು ಉತ್ತರ ಒಳನಾಡು ಭಾಗದಲ್ಲಿ 14.75 ಸೆಂ.ಮೀ ಮಳೆ ಸುರಿದಿದೆ. ಇಲ್ಲಿ ಕ್ರಮವಾಗಿ ಶೇ 74 ಮತ್ತು ಶೇ 136ರಷ್ಟು ಹೆಚ್ಚು ವರ್ಷಧಾರೆಯಾಗಿದೆ. 

ಮುಂಗಾರು ಪೂರ್ವ ಅವಧಿಯಲ್ಲಿ ಅಕಾಲಿಕವಾಗಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವುದು ಕರ್ನಾಟಕಕ್ಕೆ ಸೀಮಿತವಾಗಿಲ್ಲ. ಇಡೀ ದೇಶದಾದ್ಯಂತ ಈ ಪ್ರವೃತ್ತಿ ಕಂಡು ಬರುತ್ತಿದೆ. ಉತ್ತರದ ಲಡಾಖ್‌ನಿಂದ ದಕ್ಷಿಣದ ತಮಿಳುನಾಡಿನವರೆಗೆ ಪಶ್ಚಿಮದ ಗುಜರಾತ್‌ನಿಂದ ಪೂರ್ವದ ಪಶ್ಚಿಮ ಬಂಗಾಳದವರೆಗಿನ ಹಲವು ರಾಜ್ಯಗಳ ಬಹುತೇಕ ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಪ್ರಮಾಣದ ಮಳೆಯಾಗುತ್ತದೆ. ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಹಲವು ಜಿಲ್ಲೆಗಳೂ ಹೆಚ್ಚಿನ ಪ್ರಮಾಣದ ಅಕಾಲಿಕ ಮಳೆಗೆ ಸಾಕ್ಷಿಯಾಗುತ್ತಿವೆ. 

ಭಾರತೀಯ ಹವಾಮಾನ ಇಲಾಖೆಯು ಮಾರ್ಚ್‌ 1ರಿಂದ ಮೇ 25ರವರೆಗೆ ದೇಶದಾದ್ಯಂತ ಜಿಲ್ಲೆಗಳಲ್ಲಿ ಆಗಿರುವ ಮಳೆಯ ಮಾಹಿತಿಯನ್ನು ಭಾರತದ ನಕ್ಷೆಯ ಮೂಲಕ ತೋರಿಸಿದ್ದು ದೇಶದ ಅರ್ಧಕ್ಕಿಂತಲೂ ಹೆಚ್ಚು ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ 60 ಮತ್ತು ಅದಕ್ಕಿಂತಲೂ ಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ. 

ಆಧಾರ: ಪಿಟಿಐ, ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ವಿಪತ್ತು ನಿರ್ವಹಣಾ ಕೇಂದ್ರ, ಡೌನ್ ಟು ಅರ್ಥ್

]]>
Sun, 01 Jun 2025 08:14:32 +0530 shivuagrico
Mane hani parihara&ಮಳೆಯಿಂದಾದ ಮನೆಹಾನಿಗೆ 50,000 ದಿಂದ 1.20 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ https://krushirushi.in/Mane-hani-parihara-2135 https://krushirushi.in/Mane-hani-parihara-2135 Mane hani parihara-ಮಳೆಯಿಂದಾದ ಮನೆಹಾನಿಗೆ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರದಿಂದ ನೈರುತ್ಯ ಮುಂಗಾರು ಹಂಗಾಮು, ಈಶಾನ್ಯ ಮುಂಗಾರು ಹಂಗಾಮಿನಲ್ಲಿನ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾಗುವ ಮನೆಗಳ ಪುನರ್ ನಿರ್ಮಾಣ, ದುರಸ್ಥಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿ ಆದೇಶಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ SDRF | NDRF ರಡಿ ನೀಡಬಹುದಾದ ಪರಿಹಾರಗಳ ಕುರಿತು ಭಾರತ ಸರ್ಕಾರದ ಗ್ರಹ ಮಂತ್ರಾಲಯವು ಮೇಲೆ ಓದಲಾದ (1) ರಂತೆ ಹೊರಡಿಸಿರುವ SDRF / NDRF Items and Norms of Assistance ರ ಮಾರ್ಗಸೂಚಿಗಳಲ್ಲಿ ನಿಗದಿಪಡಿಸಿರುವ ಪರಿಹಾರ ಮೊತ್ತದ ಜೊತೆಗೆ, 2024-25 ನೇ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ (01.06.2025 ರಿಂದ 30.09.2025) ಮತ್ತು ಈಶಾನ್ಯ ಮುಂಗಾರು ಹಂಗಾಮಿನಲ್ಲಿ (01.10.2025 ರಿಂದ 31.12.2025) ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪುವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಹೆಚ್ಚುವರಿ ಮೊತ್ತವನ್ನು ನಿಗದಿಪಡಿಸಿ, ಸದರಿ ಪರಿಹಾರ ಮೊತ್ತವನ್ನು ಪಾವತಿಸಲು ಜಿಲ್ಲಾಧಿಕಾರಿಗಳು ಅನುಸರಿಸಬೇಕಾಗಿರುವ ಕ್ರಮಗಳ ಮತ್ತು ಷರತ್ತುಗಳ ಕುರಿತು ಮೇಲೆ ಓದಲಾದ (2), (3) ಮತ್ತು (4) ರ ಆದೇಶಗಳಲ್ಲಿ ಸೂಚನೆಗಳನ್ನು ನೀಡಲಾಗಿರುತ್ತದೆ.

ಪುಸ್ತುತ ಭಾರತೀಯ ಹವಾಮಾನ ಇಲಾಖೆಯು ನೈಋತ್ಯ ಮುಂಗಾರು (SouthWest) ಹಂಗಾಮು-2025 ರ ಮೊದಲ ಹಂತದ ಕಾರ್ಯಚರಣೆಯ ಧೀರ್ಘ ವ್ಯಾಪ್ತಿಯ ಮುನ್ಸೂಚನೆಯ (LRF) ಪುಕಾರ ಒಟ್ಟಾರೆಯಾಗಿ ದೇಶದಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಮೇಲೆ ಓದಲಾದ (5) ರ ದಿನಾಂಕ: 15.05.2025 ರಂದು ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತದೆ. ಹಾಗಾಗಿ, ಪ್ರಸಕ್ತ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಮನೆ ಹಾನಿಗೆ ಪರಿಹಾರವನ್ನು ಪಾವತಿಸುವ ಬಗ್ಗೆ ಮಾರ್ಗಸೂಚಿಗಳನ್ನು ನೀಡುವುದು ಅವಶ್ಯಕವಾಗಿರುತ್ತದೆವಾದ್ದರಿಂದ, ಅತಿವೃಷ್ಟಿ | ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ 2024-25 ನೇ ಸಾಲಿನಲ್ಲಿ ಪಾವತಿಸಿರುವ ಪರಿಹಾರದಂತೆ 2025-26 ನೇ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ (01.06.2025 ರಿಂದ 30.09.2025) ಮತ್ತು ಈಶಾನ್ಯ ಮುಂಗಾರು ಹಂಗಾಮಿನಲ್ಲಿ (01.10.2025 ರಿಂದ 31.12.2025) ಹಾನಿಗೊಳಗಾಗುವ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ನಿಯಾಮಾನುಸಾರ ಅರ್ಹತೆಯಂತೆ ಜಿಲ್ಲಾಧಿಕಾರಿರವರ ಹಂತದಲ್ಲಿಯೇ ಅವರ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪಾವತಿಸಲು ಸರ್ಕಾರವು ನಿರ್ಧರಿಸಿ ಕೆಳಕಂಡಂತೆ ಆದೇಶಿಸಿದೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಅತಿವೃಷ್ಟಿ | ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ 2024-25 ನೇ ಸಾಲಿನಲ್ಲಿ ಪಾವತಿಸಿರುವ ಕೆಳಕಂಡ ಪರಿಹಾರದಂತೆ, 2025-26 ನೇ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ (01.06.2025 ರಿಂದ 30.09.2025) ಮತ್ತು ಈಶಾನ್ಯ ಮುಂಗಾರು ಹಂಗಾಮಿನಲ್ಲಿ (01.10.2025 ರಿಂದ 31.12.2025) ಹಾನಿಗೊಳಗಾಗುವ ಮನೆಗಳ ಪುನರ್ ನಿರ್ಮಾಣ / ದುರ ಕಾರ್ಯ ಹಾಗೂ ಪುವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ನಿಯಾಮಾನುಸಾರ ಅರ್ಹತೆಯಂತೆ ಪರಿಹಾರವನ್ನು ಮೇಲೆ ಓದಲಾದ (2), (3) ಮತ್ತು (4) ರ ಆದೇಶಗಳಲ್ಲಿ ವಿಧಿಸಿರುವ ಷರತ್ತುಗಳ ಪಾಲನೆಗೆ ಒಳಪಟ್ಟು, ಜಿಲ್ಲಾಧಿಕಾರಿರವರ ಹಂತದಲ್ಲಿಯೇ ಅವರ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪಾವತಿಸಲು ಸರ್ಕಾರದ ಮಂಜೂರಾತಿ ನೀಡಿ, ಆದೇಶಿಸಿದೆ.

ಪ್ರವಾಹದಿಂದ ಹಾನಿಗೊಳಗಾದ ಮನೆಗಳನ್ನು 02 ವರ್ಗಗಳಲ್ಲಿ (ಪೂರ್ಣ ಹಾನಿಯಾದ ಮನೆಗಳ ಮರು ನಿರ್ಮಾಣ ಮತ್ತು ಭಾಗಶ: ಹಾನಿಯಾದ ಮನೆಗಳ ದುರಸ್ತಿ) ವಿಂಗಡಿಸಿ ಪರಿಹಾರ ಪಾವತಿಸುವುದು.


ಪೂರ್ಣಹಾನಿಯಾದ ಮನೆಗಳಿಗೆ ಭಾರತ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ:11/07/2023ರಂದು ಹೊರಡಿಸಿರುವ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ / ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ವಯ ರೂ.1.20 ಲಕ್ಷಗಳ ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ ವಸತಿ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ದೇವರಾಜ್ ಅರಸು ವಸತಿ ಯೋಜನೆಯಡಿ ಮನೆ ನೀಡುವುದು. ದೇವರಾಜ್ ಅರಸು ವಸತಿ ಯೋಜನೆಯಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸಾಮಾನ್ಯ ವರ್ಗಗಳಿಗೆ ಮಂಜೂರು ಮಾಡುವ ಮನೆಗೆ ರೂ.1.20 ಲಕ್ಷ ಮತ್ತು ಎಸ್ಸಿ/ಎಸ್‌ಟಿ ವರ್ಗಗಳಿಗೆ ಮಂಜೂರು ಮಾಡುವ ಮನೆಗೆ ರೂ.1.50 ಲಕ್ಷ ಮಂಜೂರು ಮಾಡುವುದು. ಈ ಮನೆಗಳನ್ನು ಜಿಲ್ಲಾಧಿಕಾರಿಗಳು ಅನುಮೋದನೆ ಮಾಡಿ ವಿವರಗಳೊಂದಿಗೆ ಫಲಾನುಭವಿಗಳ ಪಟ್ಟಿಯನ್ನು RGRHCL ಪರಿಹಾರ ತಂತ್ರಾಂಶದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ವಿವರಗಳನ್ನು ದಾಖಲಿಸುವುದು.
ಅನಧಿಕೃತ ಜಮೀನಿನಲ್ಲಿ ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ಒಂದು ಬಾರಿ ಪರಿಹಾರವಾಗಿ ರೂ.1.00 ಲಕ್ಷಗಳನ್ನು ಪಾವತಿಸುವುದು ಮತ್ತು ಯಾವುದೇ ಮನೆಯನ್ನು ಮಂಜೂರು ಮಾಡುವಂತಿಲ್ಲ.

ಭಾರತ ಸರ್ಕಾರದ ಗ್ರಹ ಮಂತ್ರಾಲಯವು ದಿನಾಂಕ:11/07/2023ರಂದು ಹೊರಡಿಸಿರುವ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ / ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ವಯ ಭಾಗಶಃ ಹಾನಿಗೊಳಗಾದ ಮನೆಗಳ ದುರಸ್ತಿಗೆ ಕನಿಷ್ಟ ರೂ.6,500/- ಗಳಿಂದ ಗರಿಷ್ಮ ರೂ.50,000/-ಗಳನ್ನು ಈ ಕೆಳಕಂಡಂತೆ ಪಾರದರ್ಶಕ ಮಾನದಂಡಗಳನ್ವಯ ಅರ್ಹತೆಯನುಸಾರ ಪಾವತಿಸುವುದು.

]]>
Sat, 31 May 2025 18:23:31 +0530 shivuagrico
Ineligible ration card&ರಾಜ್ಯದಲ್ಲಿ ಶೇಕಡಾ 74 ರಷ್ಟು ಅನರ್ಹ ಬಿಪಿಎಲ್ ಕಾರ್ಡ್&ರದ್ದು ಮಾಡಲು ಆದೇಶಿಸಿದ ಸಿದ್ದರಾಮಯ್ಯ https://krushirushi.in/Ineligible-ration-card-2134 https://krushirushi.in/Ineligible-ration-card-2134 Ineligible ration card-ರಾಜ್ಯದಲ್ಲಿ ಶೇಕಡಾ 74 ರಷ್ಟು ಅನರ್ಹ ಬಿಪಿಎಲ್ ಕಾರ್ಡ್-ರದ್ದು ಮಾಡಲು ಆದೇಶಿಸಿದ ಸಿದ್ದರಾಮಯ್ಯ

ಅನರ್ಹ ಪಡಿತರ ಚೀಟಿದಾರರಿಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದ್ದು, ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ವಸತಿ ಸೇರಿದಂತೆ ವಿವಿಧ ಇಲಾಖೆಗಳ ಬಗ್ಗೆ ಸತತ 9 ಗಂಟೆಗಳ ಕಾಲ ಸುಧೀರ್ಘ ಸಭೆ ನಡೆಸಿದ್ದಾರೆ.
ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಆದರೆ ಇದರಲ್ಲಿ ನಿರೀಕ್ಷಿತ ಪ್ರಗತಿ ಯಾಕೆ ಸಾಧ್ಯವಾಗಿಲ್ಲ.

 ರಾಜ್ಯದಲ್ಲಿ ಸುಮಾರು ಶೇ. 74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಸೂಚನೆ ನೀಡಿಯಾಗಿತ್ತು. ಆದರೂ ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಆಗಿಲ್ಲ ಏಕೆ ಎಂದು ಪ್ರಶ್ನಿಸಿದರು.

ಅನರ್ಹ ಪಟ್ಚಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಈ ತಿಂಗಳಿನಿಂದ ಅನ್ನಭಾಗ್ಯ ಹಾಗೂ ಗೃಹಲಕ್ಷ್ನಿ ಹಣ ಸಿಗುವುದಿಲ್ಲ

]]>
Sat, 31 May 2025 13:15:52 +0530 shivuagrico
Marriage incentive&ಮದುವೆ ಆಗುವವರಿಗೆ ಸಿಗಲಿದೆ 60,000 ರೂಪಾಯಿ ಸಹಾಯಧನ https://krushirushi.in/Marriage-incentive-2133 https://krushirushi.in/Marriage-incentive-2133 Marriage incentive-ಮದುವೆ ಆಗುವವರಿಗೆ ಸಿಗಲಿದೆ 60,000 ರೂಪಾಯಿ ಸಹಾಯಧನ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಡ ಮಂಡಳಿ ನೊಂದಾಯಿತ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಮಂಡಳಿಯು ನೋಂದಾಯಿತ ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ 60,000 ರೂ. ಸಹಾಯಧನವನ್ನು ನೀಡುತ್ತದೆ.

ನೋ೦ದಾಯಿತ ಕಾರ್ಮಿಕರ ಮದುವೆ ಅಥವಾ ಅವರ ಮಕ್ಕಳ ಮದುವೆಗೆ ಮ೦ಡಳಿಯು ಸಹಾಯಧನವನ್ನು ನೀಡುತ್ತದೆ

ಅರ್ಹತೆ ಮತ್ತು ಮಾನದಂಡಗಳು

ಮ೦ಡಳಿಯಲ್ಲಿ ನೋ೦ದಾಯಿತ ಸದಸ್ಯರಾಗಿರಬೇಕು

ನೋ೦ದಣಿ ದಿನಾ೦ಕದಿ೦ದ ಮದುವೆ ದಿನಾ೦ಕದವರೆಗೆ ಮ೦ಡಳಿಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು

ಒ೦ದು ಕುಟು೦ಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅವಕಾಶವಿರುತ್ತದೆ

ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ತಲುಪಿರಬೇಕು

ಮದುವೆಯ ದಿನಾ೦ಕದಿಂದ 6 ತಿಂಗಳ ಒಳಗೆ ಅರ್ಜಿ ಸಲ್ಲಿಸಬೇಕು

ಈ ರೀತಿ ಅರ್ಜಿ ಸಲ್ಲಿಸಿ

1) ಅಧಿಕೃತ ವೆಬ್ ಸೈಟ್ https://karbwwb.karnataka.gov.in/kn  ಗೆ ಭೇಟಿ ನೀಡಿ
2) ಬಳಿಕ ಲಾಗಿನ್ ಆಗಬೇಕು
3) Registration ಮೇಲೆ ಕ್ಲಿಕ್ ಮಾಡಿ ಪೂರ್ಣಗೊಳಿಸಿ
4)ಬಳಿಕ ಅಲ್ಲಿ Schemes ಯೋಜನೆಗಳು ಮೇಲೆ ಕ್ಲಿಕ್ ಮಾಡಿ
5) ನಂತರ ಮದುವೆ ಸಹಾಯಧನ ಮೇಲೆ ಕ್ಲಿಕ್ ಮಾಡಿ
6) ಕೇಳಲಾದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ದಾಖಲಾತಿಗಳನ್ನು ಅಪ್ ಲೋಡ್ ಮಾಡಿ
7) ಕೊನೆಗೆ submit ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ

Online marriage registration-ಮದುವೆಗಳು ನಿಶ್ಚಯವಾಗಲಿ ಸ್ವರ್ಗದಲ್ಲಿ,ನೊಂದಣೆಯಾಗಲಿ ಕಾವೇರಿ 2.0ರಲ್ಲಿ, ನೊಂದಣೆ ಮಾಡುವ ಡೈರೆಕ್ಟ್ ಲಿಂಕ್

ರಾಜ್ಯ ಸರ್ಕಾರದಿಂದ ವಿವಾಹ ನೋದಂಣಿಗಾಗಿ ಕಚೇರಿ ಅಲೆದಾಟಕ್ಕೆ ಬ್ರೇಕ್ ಹಾಕಲಾಗಿದೆ. ಇದರ ಬದಲಾಗಿ ಆನ್ ಲೈನ್ ಮೂಲಕ ನೋಂದಣಿ ಮಾಡೋದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸೋ ನಿಮಗೆ ವಿವಾಹ ನೋಂದಣಿ ಮಾಜಿಸಬೇಕು ಅಂದ್ರೆ ಜಸ್ಟ್ ಕುಳಿತಲ್ಲೇ ಆನ್ ಲೈನ್ ಮೂಲಕ ನೋಂದಣಿ ಮಾಡಬಹುದಾಗಿದೆ.

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ


https://kaveri.karnataka.gov.in  

ನಂತರ ಬಲಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ Register ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಿನಂತೆ ನಿಮ್ಮ ಮಾಹಿತಿಯನ್ನು ತುಂಬಿ register ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಇಮೇಲ್ ಗೆ ಬರುವ User Id ಮತ್ತು password ಹಾಕಿ ಪೋರ್ಟಲ್‌ಗೆ ಲಾಗಿನ್ ಮಾಡಿ

ವಿವಾಹ ನೋಂದಣಿ ಸೇವೆ ಆಯ್ಕೆಮಾಡಿ ಮತ್ತು ವಿವರ ನಮೂದಿಸಿ ಅರ್ಜಿ ಸಲ್ಲಿಸಿ


ಗಂಡ, ಹೆಂಡತಿ ಮತ್ತು ಮೂರು ಸಾಕ್ಷಿದಾರರ ಆಧಾ‌ರ್ ದೃಢೀಕರಣ ಪ್ರಕ್ರಿಯೆ ಪೂರ್ಣಗೊಳಿಸಿ
(ಇ-ನೋಂದಣಾಧಿಕಾರಿಯಿಂದ ಅರ್ಜಿ ಪರಿಶೀಲನೆ,ಆನ್‌ಲೈನ್ ಮೂಲಕ ಶುಲ್ಕ ಸಂದಾಯಕ್ಕೆ ಅವಕಾಶ)

ಕಾವೇರಿ ಪೋರ್ಟಲ್‌ನಲ್ಲಿ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಿ

]]>
Sat, 31 May 2025 06:30:21 +0530 shivuagrico
Free mobile repair training&ಉಚಿತ ಊಟ ವಸತಿಯೊಂದಿಗೆ 1 ತಿಂಗಳ ಮೊಬೈಲ್ ರಿಪೇರಿ ತರಭೇತಿ https://krushirushi.in/Free-mobile-repair-training-2132 https://krushirushi.in/Free-mobile-repair-training-2132 Free mobile repair training-ಉಚಿತ ಊಟ ವಸತಿಯೊಂದಿಗೆ 1 ತಿಂಗಳ ಮೊಬೈಲ್ ರಿಪೇರಿ ತರಭೇತಿ

ಹಾವೇರಿ ಜಿಲ್ಲೆಯವರಿಗೆ ಮಾತ್ರ

ಉಚಿತ ಉಚಿತ ಉಚಿತ
*ಬ್ಯಾಂಕ್ ಆಫ್ ಬರೋಡ  ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ *"    ಮೊಬೈಲ್ ರೀಪೆರ್* "ತರಬೇತಿ ಯನ್ನು *ಜುಲೈ ತಿಂಗಳಲ್ಲಿ* ಹಮ್ಮಿಕೊಳ್ಳಲಾಗಿದೆ

 *ತರಬೇತಿಯಲ್ಲಿ* 
1)ಕೀ ಪ್ಯಾಡ್  ಐಂಡ್ರಾಯಿಡ್ ಮೊಬೈಲ್ ರೀಪೆರ 
2)  ಫವರ್, ವೊಲ್ಟೇಜ್,ಚಾರ್ಜಿಂಗ್,ಕ್ಯಾಮರ್,ಬ್ಯಾಟರಿ,ಡಿಸ್ಪ್ಲೆ,ಹ್ಯಾಂಗಿಂಗ್ ಪ್ರಾಬ್ಲಮ್ ಸೋಲುಶನ್
3)ರೀಸೆಟ್,ಸಾಪ್ಟವೇರ್ಸ,GPRS,wifi,GSM,MMC ಇತ್ಯಾದಿಗಳನ್ನು ಉಚಿತವಾಗಿ ಕಲಿಸುತ್ತೇವೆ

ತಮ್ಮ ಹೆಸರನ್ನು ಫೋನ್ ಮೂಲಕ ನೋಂದಾಯಿಸಿಕೊಳ್ಳಲು *8660219375* ನಂಬರ್ ಗೆ ಕಾಲ್ ಮಾಡಿ.

Free CCTV Installation and repair training-ಉಚಿತ ಊಟ ವಸತಿಯೊಂದಿಗೆ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿ

ಇದೇ ರೀತಿ ಬೇರೆ ಜಿಲ್ಲೆಗಳಲ್ಲೂ ಲೀಡ್ ಬ್ಯಾಂಕ್ ವತಿಯಿಂದ ತರಭೇತಿಗಳು ನಡೆಯುತ್ತವೆ,ಹೆಚ್ಚಿನ ಮಾಹಿತಿಗಾಗಿ ನಿಮ್ಮ ಜಿಲ್ಲೆಯ ಲೀಡ್ ಬ್ಯಾಂಕ್ ಸಂಪರ್ಕಿಸಿ


Free tailoring training-ಉಚಿತ ಊಟ ವಸತಿಯೊಂದಿಗೆ ಹೊಲಿಗೆ ಯಂತ್ರ ತರಭೇತಿ


ಉಚಿತ ಉಚಿತ ಉಚಿತ
*ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ ಮಹಿಳೆಯರ ಉಚಿತ ಹೊಲಿಗೆ ತರಬೇತಿಯನ್ನು ದಿನಾಂಕ 2.6.2025 ರಿಂದ 2.7.2025  ರ ವರೆಗೆ 31 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ* 

ಹಾವೇರಿ ಜಿಲ್ಲೆಯ  ಗ್ರಾಮೀಣ ಭಾಗದ BPL ರೇಷನ್ ಕಾರ್ಡ ಹೊಂದಿದ 18-45 ವಯಸ್ಸಿನ ನಿರುದ್ಯೋಗಿ ಯುವತಿಯರಿಗೆ ಅವಕಾಶವಿದೆ.
 *ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ.*
ತರಬೇತಿಯಲ್ಲಿ ಕಲಿಸುವ ವಿಷಯಗಳು 
ಕಟೋರಿ ಬ್ಲೌಸ್
ಪ್ರಿನ್ಸೆಸ್ ಕಟ್ ಬ್ಲೌಸ್ 
ಬೋಟ್ ನೆಕ್ ಬ್ಲೌಸ್ 
ಸಾದಾ ಬ್ಲೌಸ್
ಹೈ ನೆಕ್ ಬ್ಲೌಸ್
V ನೆಕ್ ಬ್ಲೌಸ್ 
ಫುಲ್ ಸ್ಲೀವ್ ಬ್ಲೌಸ್ ಹೊಲಿಯುವುದು 
ಚೂಡಿದಾರ್ ಹೊಲಿಯುವುದು 
ಸಣ್ಣ ಮಕ್ಕಳ ಬಟ್ಟೆ ಹೊಲಿಯುವುದು 
ಯೂನಿಫಾರ್ಮ್
ಲಾಂಗ್ ಗೌನ್ ಹೊಲಿಯುವುದು
ಕ್ರಾಪ್ ಟಾಪ್ ಹೊಲಿಯುವುದು
ನೈಟ್ ಡ್ರೆಸ್ ಹೊಲಿಯುವುದು
ಮುಂತಾದವುಗಳನ್ನು ಉಚಿತವಾಗಿ ಕಲಿಸುತ್ತೇವೆ..

ತಮ್ಮ ಹೆಸರನ್ನು ಫೋನ್ ಮೂಲಕ ನೋಂದಾಯಿಸಿಕೊಳ್ಳಲು *8660219375* ನಂಬರ್ ಗೆ ಕಾಲ್ ಮಾಡಿ.

]]>
Fri, 30 May 2025 13:16:51 +0530 shivuagrico
Bhagyalakshmi bond&ಭಾಗ್ಯಲಕ್ಷ್ಮಿ ಯೋಜನೆಯಡಿ 18 ವರ್ಷ ತುಂಬಿದ ಹೆಣ್ಣು ಮಕ್ಕಳ ಖಾತೆಗೆ 1 ಲಕ್ಷ ಹಣ ಜಮಾ ಪ್ರಾರಂಭ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ https://krushirushi.in/Bhagyalakshmi-bond-2131 https://krushirushi.in/Bhagyalakshmi-bond-2131 Bhagyalakshmi bond-ಭಾಗ್ಯಲಕ್ಷ್ಮಿ ಯೋಜನೆಯಡಿ 18 ವರ್ಷ ತುಂಬಿದ ಹೆಣ್ಣು ಮಕ್ಕಳ ಖಾತೆಗೆ 1 ಲಕ್ಷ ಹಣ ಜಮಾ ಪ್ರಾರಂಭ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2006-07ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ಬಾಂಡ್ ಪಡೆದ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ಪಾವತಿಸಲು ಪ್ರಸ್ತಾವನೆ ಸಲ್ಲಿಸಬಹುದು.

ಮೂಲ ಭಾಗ್ಯಲಕ್ಷ್ಮಿ ಬಾಂಡ್, ಬ್ಯಾಂಕ್ ಖಾತೆಯ ಪಾಸ್ ಪುಸ್ತಕ, ಬಿಪಿಎಲ್ ರೇಷನ್ ಕಾರ್ಡ್, ವ್ಯಾಸಂಗ ಪ್ರಮಾಣ ಪತ್ರ, ತಂದೆ, ತಾಯಿ ಮಗುವಿನ ಆಧಾರ್ ಕಾರ್ಡ್ ಜನನ ಪ್ರಮಾಣ ಪತ್ರ ಸಲ್ಲಿಸಬೇಕೆಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

http://blakshmi.kar.nic.in:8080/First.jsp

ನಂತರ "Home" ಪಕ್ಕದಲ್ಲಿರುವ "Quick search" ಮೇಲೆ ಕ್ಲಿಕ್ ಮಾಡಿ 

ನಂತರ "Quick search" ಕೆಳಗಿರುವ "Multi search" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು Select ಮಾಡಿ

ನಂತರ ನಿಮ್ಮ ಹೆಣ್ಣು ಮಗುವಿನ ಹೆಸರು,ಜನ್ಮ ದಿನಾಂಕ ಹಾಗೂ ಭಾಗ್ಯಲಕ್ಷ್ಮಿ ಬಾಂಡ್ ನಲ್ಲಿರುವ ಮಗುವಿನ id numbe ಹಾಕಿ,captch code ಹಾಕಿ search ಮೇಲೆ ಕ್ಲಿಕ್ ಮಾಡಿದರೆ, ಪಟ್ಟಿ ದೊರೆಯಲಿದೆ

ಫಲಾನುಭವಿಗಳು ಚಾಲ್ತಿಯಲ್ಲಿನ ಬ್ಯಾಂಕ್‌ ಖಾತೆ ಸಂಖ್ಯೆ, ಐಎಸ್‌ಎಫ್‌ಸಿ ಕೋಡ್‌, ಆಧಾರ್‌ ಕಾರ್ಡ್‌ ಸಂಖ್ಯೆ, ಯೋಜನೆಯ ಒರಿಜಿನಲ್‌ ಬಾಂಡ್‌, ಮಗುವಿನ ಜನನ ಪ್ರಮಾಣ ಪತ್ರ, ತಂದೆ, ತಾಯಿ, ಮಗುವಿನ ಹೆಸರು ಬದಲಾವಣೆಯಾಗಿದ್ದರೆ ಸಂಬಂಧಿಸಿದ ಸಿಡಿಪಿಒ ಅವರಿಂದ ದೃಢೀಕರಣ ಪತ್ರ, ಬಾಂಡ್‌ ಕಳೆದಿದ್ದರೆ ಬಾಂಡ್‌ ನಕಲು ಪ್ರತಿ ಜತೆ ಎಫ್‌ಐಆರ್‌ ಪ್ರತಿ, ದತ್ತು ಮಕ್ಕಳಾಗಿದ್ದಲ್ಲಿಕಾನೂನಾತ್ಮಕವಾಗಿ ದತ್ತು ಪಡೆದ ಪೋಷಕರ ಹೆಸರನ್ನು ಸಿಡಿಪಿಒ ದೃಢೀಕರಿಸಬೇಕು. ತಾಲೂಕು ಕೋಡ್‌ ಬದಲಾವಣೆ ಇದ್ದಲ್ಲಿ ಸಿಡಿಪಿಒ ದೃಢೀಕರಿಸಿದ ನಂತರವೇ ಪರಿಪಕ್ವ ಹಣ ನೀಡಲಾಗುವುದು.



ಏನಿದು ಭಾಗ್ಯಲಕ್ಷ್ಮಿ ಯೋಜನೆ


ಹೆಣ್ಣು ಮಗುವಿನ ಸ್ಥಾನವನ್ನು ಮೊದಲು ಕುಟುಂಬದಲ್ಲಿ ನಂತರ ಸಮಾಜದಲ್ಲಿ ಹೆಚ್ಚಿಸಲು ಮತ್ತು ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನ ಉತ್ತೇಜಿಸಲು 2006-07ನೇ ಸಾಲಿನಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆ "ಭಾಗ್ಯಲಕ್ಷ್ಮಿ" ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಯಿತು.

 ಈ ಯೋಜನೆಯ ಆರ್ಥಿಕ ಸೌಲಭ್ಯವನ್ನು ಹೆಣ್ಣು ಮಗುವಿಗೆ ಅದರ ತಾಯಿ/ತಂದೆ/ಪೋಷಕರ ಮೂಲಕ ಕೆಲವು ನಿಬಂಧನೆಗಳನ್ನು ಪೂರೈಸಿದಲ್ಲಿ ನೀಡಲಾಗುವುದು.
← ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬಗಳಲ್ಲಿ 31.3.2006ರ ನಂತರ ಜನಿಸಿದ ಹೆಣ್ಣು ಮಕ್ಕಳು ಈ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸಿಕೊಳ್ಳಲು ಆರ್ಹರಿರುತ್ತಾರೆ.


ಮಗು ಜನಿಸಿದ ಒಂದು ವರ್ಷದೊಳಗೆ ಜನನ ಪ್ರಮಾಣ ಪತ್ರವನ್ನು ಒದಗಿಸಿ ನೋಂದಾಯಿಸಲು ಅವಕಾಶವಿದೆ.


ಈ ಯೋಜನೆಯ ಸೌಲಭ್ಯಗಳನ್ನು ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬದ ಇಬ್ಬರು ಹೆಣ್ಣುಮಕ್ಕಳಿಗೆ ಸೀಮಿತಗೊಳಿಸಲಾಗಿದೆ.


ಫಲಾನುಭವಿ ಹೆಣ್ಣುಮಗುವಿನ ತಂದೆ ಅಥವಾ ತಾಯಿ ಶಾಶ್ವತ ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡಿರತಕ್ಕದ್ದು ಮತ್ತು ಕುಟುಂಬದಲ್ಲಿ ಮಕ್ಕಳ ಸಂಖ್ಯೆ 2ಕ್ಕಿಂತ ಹೆಚ್ಚಿಗೆ ಇರಬಾರದು.


ನೋಂದಣಿ ನಂತರ ಹಾಗೂ ಪೂರ್ಣ ಪರಿಶೀಲನೆ ನಂತರ ದಿನಾಂಕ:31.07.2008ರವರೆಗೆ ಜನಿಸಿದ ಪ್ರತಿ ಫಲಾನುಭವಿಗೆ ರೂ.10,000/-ಗಳನ್ನು ಆಯ್ಕೆಯಾದ ಪಾಲುದಾರ ಹಣಕಾಸು ಸಂಸ್ಥೆಯಲ್ಲಿ ನಿಶ್ಚಿತ ಠೇವಣಿಯನ್ನು ಇಡಲಾಗಿದೆ.


ಪಾಲುದಾರ ಹಣಕಾಸು ಸಂಸ್ಥೆಯು ಹೆಣ್ಣುಮಗುವಿನ ಹೆಸರಿನಲ್ಲಿ ಇಟ್ಟ ರೂ.10,000/-ಗಳ ಠೇವಣಿಯ ಮೇಲಿನ ಆದಾಯವನ್ನು ಗರಿಷ್ಠಗೊಳಿಸಿ, ಠೇವಣಿ ಹಣವನ್ನು ಬಡ್ಡಿ ಸಮೇತವಾಗಿ ಫಲಾನುಭವಿಗಳಿಗೆ 18 ವರ್ಷಗಳು ಪೂರ್ಣಗೊಂಡನಂತರ ದೊರಕಿಸಿಕೊಡುತ್ತದೆ.


ಮೊದಲ ಮಗುವಿಗೆ ಪರಿಪಕ್ವ ಮೊತ್ತ ರೂ.34,751/-ನ್ನು ಮತ್ತು ಎರಡನೇ ಮಗುವಿಗೆ ರೂ.40,918/-ನ್ನು ನೀಡಲಾಗುತ್ತದೆ.


 ಫಲಾನುಭವಿಗೆ ವಿದ್ಯಾರ್ಥಿ ವೇತನ, ವಿಮೆ ಸೌಲಭ್ಯ ಮುಂತಾದ ಮಧ್ಯಂತರ ಸಂದಾಯಗಳನ್ನು ಯೋಜನೆಯಡಿ ತಿಳಿಸಲಾದ ಅರ್ಹತೆ ಮಾನದಂಡಗಳನ್ನು ಪೂರೈಸಿದಲ್ಲಿ ನೀಡಲಾಗುವುದು.


• ದಿನಾಂಕ:01.04.2006 ರಿಂದ 31.07.2008ರ ವರೆಗೆ ಜನಿಸಿ ಯೋಜನೆಯಡಿ ನೋಂದಣಿಯಾದ ಮಕ್ಕಳು ವಿದ್ಯಾರ್ಥಿ ವೇತನ ಪಡೆಯಲು ಪ್ರತಿ ತರಗತಿಯಲ್ಲಿಯೂ ವರ್ಷದಿಂದ ವರ್ಷಕ್ಕೆ ತೇರ್ಗಡೆ ಹೊಂದಬೇಕು.

ಈ ಯೋಜನೆಯನ್ನು ದಿನಾಂಕ:20.01.2009ರಂದು ಪರಿಷ್ಕರಿಸಲಾಗಿರುತ್ತದೆ. (ದಿನಾಂಕ: 01.08.2008 ರಿಂದ ಜನಿಸಿದ ಹೆಣ್ಣು ಮಕ್ಕಳಿಗೆ ಅನ್ವಯಿಸುತ್ತದೆ).


ಪರಿಷ್ಕರಿಸಲಾದ ಯೋಜನೆಯ ರೂಪುರೇಷೆಗಳು ಕೆಳಕಂಡಂತಿವೆ.
ಯೋಜನೆಯಡಿ ನೋಂದಣಿಯಾದ ಕುಟುಂಬದಲ್ಲಿನ ಮೊದಲನೇ ಹೆಣ್ಣು ಮಗುವಿನ ಹೆಸರಿನಲ್ಲಿ ರೂ. 19,300/- ಹಾಗೂ ಅದೇ ಕುಟುಂದಲ್ಲಿನ 2ನೇ ಹೆಣ್ಣು ಮಗುವಿನ ಹೆಸರಿನಲ್ಲಿ ರೂ. 18,350/- ಗಳನ್ನು ಪಾಲುದಾರ ಹಣಕಾಸು ಸಂಸ್ಥೆಯಲ್ಲಿ ಪ್ರಾರಂಭಿಕ ಠೇವಣಿ ಇಡಲಾಗುತ್ತದೆ.


18 ವರ್ಷ ಪೂರ್ಣಗೊಂಡ ನಂತರದಲ್ಲಿ ಹೆಣ್ಣು ಮಕ್ಕಳು ರೂ. 1,00,000/- ಪರಿಪಕ್ಷ ಮೊತ್ತ ಪಡೆಯಲು ಅರ್ಹರಿರುತ್ತಾರೆ.


ಯೋಜನೆಯ ಉದ್ದೇಶಗಳು:
ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನವನ್ನು ಉತ್ತೇಜಿಸುವುದು ಮತ್ತು ಆತ್ಮ ಧೈರ್ಯ ತುಂಬುವುದು.


ಬಾಲ ಕಾರ್ಮಿಕತೆ, ಹೆಣ್ಣು ಭ್ರೂಣಹತ್ಯೆ, ಬಾಲ್ಯ ವಿವಾಹ ಮತ್ತು ಹೆಣ್ಣು ಮಕ್ಕಳ ಮಾರಾಟ ಮುಂತಾದ ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟುವುದು.


 ಆರೋಗ್ಯ, ಶಿಕ್ಷಣ, ಪೋಷಣೆ ಮತ್ತು ಪೌಷ್ಠಿಕ ಮಟ್ಟವನ್ನು ಉತ್ತಮ ಪಡಿಸುವುದರ ಮೂಲಕ ಹೆಣ್ಣು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯನ್ನು ಉತ್ತಮಪಡಿಸುದು.


 ಹೆಣ್ಣು ಮಗುವಿಗೆ ಆರ್ಥಿಕ ನೆರವು ನೀಡುವುದರ ಮೂಲಕ ಅವರನ್ನು ಸಮಾಜದಲ್ಲಿ ಸದೃಢರನ್ನಾಗಿ ಮಾಡುವುದು.
ಪ್ರಸ್ತುತ ಯೋಜನೆಯ ಸೌಲಭ್ಯ ಪಡೆಯಲು ಇರಬೇಕಾದ

ಅರ್ಹತೆಯ ಅಂಶಗಳು:
• ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಗುರುತಿಸಿ ಶಾಶ್ವತ ಬಿಪಿಎಲ್ ಕಾರ್ಡ್/ಆದ್ಯತಾ ಕುಟುಂಬ ಪಡಿತರ ಚೀಟಿ ಹೊಂದಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಎರಡು ಹೆಣ್ಣು ಮಕ್ಕಳು ಯೋಜನೆಯಡಿ ನೊಂದಣಿ ಮಾಡಲು ಅರ್ಹರಿರುತ್ತಾರೆ.


• ಕುಟುಂಬದಲ್ಲಿ ಮಕ್ಕಳ ಸಂಖ್ಯೆ ಎರಡನ್ನು ಮೀರಿರಬಾರದು. ಈ ಕುಟುಂಬವು ಮಗುವಿನ ತಂದೆ ಅಥವಾ ತಾಯಿ

ಯಾರದಾರೊಬ್ಬರು ಶಾಶ್ವತ ಕುಟುಂಬ ಯೋಜನೆಯ ಪದ್ಧತಿಯನ್ನು ಅಳವಡಿಸಿಕೊಂಡಿರಬೇಕು. ವಿಶೇಷ ಪ್ರಕರಣಗಳಲ್ಲಿ ಅಂದರೆ ಮೊದಲನೇ ಹೆರಿಗೆಯಲ್ಲಿ ಅವಳಿ ತ್ರಿವಳಿ ಹೆಣ್ಣು ಮಕ್ಕಳು ಜನಿಸಿದ್ದಲ್ಲಿ ಹಾಗು ಎರಡನೇ ಹೆರಿಗೆಯಲ್ಲಿ ಅವಳಿ/ತ್ರಿವಳಿ ಹೆಣ್ಣು ಮಕ್ಕಳು ಜನಿಸಿದ್ದಲ್ಲಿ ಈ ಎಲ್ಲಾ ಹೆಣ್ಣು ಮಕ್ಕಳಿಗೂ ಸೌಲಭ್ಯ ನೀಡುವುದು. ಈ ಸೌಲಭ್ಯವನ್ನು ಎರಡು ಹೆರಿಗೆಗೆ ಮಾತ್ರ ಮಿತಿಗೊಳಿಸುವುದು. ಇಂತಹ ಪ್ರಕರಣಗಳಲ್ಲಿ ಮಾತ್ರ ಕುಟುಂಬದ ಮಕ್ಕಳ ಸಂಖ್ಯೆ ಎರಡನ್ನು ಮೀರಿರಬಾರದು ಎಂಬ ನಿಯಮವನ್ನು ಸಡಿಲಿಸಲಾಗಿದೆ.

ಈ ಯೋಜನೆಯನ್ನು ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲೂ ಅನುಷ್ಟಾನಗೊಳಿಸಲಾಗುವುದು. ಅಂಗನವಾಡಿ ಕೇಂದ್ರಗಳು ಇಲ್ಲದೆ ಇರುವ ಪ್ರದೇಶಗಳಲ್ಲಿ ವಾಸಿಸುವ ಪೋಷಕರು ತಮ್ಮ ಸಮೀಪದ ಅಂಗನವಾಡಿ ಕೇಂದ್ರದಲ್ಲಿ ನೊಂದಣಿ ಮಾಡುವುದು. ಮಗುವಿನ ಜನನವನ್ನು ಕಡ್ಡಾಯವಾಗಿ ನೊಂದಾಯಿಸಿರಬೇಕು ಹಾಗೂ ಜನನ ಪ್ರಮಾಣ ಪತ್ರವನ್ನು ಹೊಂದಿರಬೇಕು.
ಪರಿಪಕ್ವ ಮೊತ್ತವನ್ನು ಪಡೆಯಲು ಫಲಾನುಭವಿ ಮಗು ಕನಿಷ್ಠ 8ನೇ ತರಗತಿಯವರೆಗೆ ವಿದ್ಯಾಭ್ಯಾಸವನ್ನು ಪಡೆದಿರಬೇಕು. ಆದರೆ ವಿಕಲಚೇತನ ಮಕ್ಕಳಿಗೆ ವಿನಾಯಿತಿ ನೀಡಲಾಗಿದ್ದು, ಸದರಿ ಮಕ್ಕಳು 1 ರಿಂದ 5ನೇ ತರಗತಿವರೆಗೆ ವ್ಯಾಸಂಗ ಮಾಡಿರಬೇಕು. ಒಂದು ವೇಳೆ ವಿಕಲಚೇತನ ಮಕ್ಕಳು ತೀವ್ರತರವಾದ ವಿಕಲತೆಯಿಂದ ಬಳಲುತ್ತಿದ್ದಲ್ಲಿ ಸಂಬಂಧಪಟ್ಟ ಜಿಲ್ಲಾ ಉಪ ನಿರ್ದೆಶಕರು ಪ್ರತಿ ಪ್ರಕರಣಗಳ ಸಾಧಕ ಬಾಧಕಗಳನ್ನು ಪರಿಶೀಲಿಸಿ ಈ ಷರತ್ತನ್ನು ಸಹ ಸಡಿಲಿಸಲು ಅಧಿಕಾರ ನೀಡಿ ಆದೇಶಿಸಿದೆ.


• 5ನೇ ಮತ್ತು 8ನೇತರಗತಿ ಉತ್ತೀರ್ಣರಾಗಿರುವ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರಿಂದ ದೃಢೀಕರಣ ಪಡೆದು ಸಲ್ಲಿಸುವುದು.


• ಬಾಲಕಾರ್ಮಿಕ ನಿಷೇಧ ಕಾಯ್ದೆ 1986ರಂತೆ ಬಾಲ ಕಾರ್ಮಿಕಳಾಗಿರತಕ್ಕದ್ದಲ್ಲ.


• 18 ವರ್ಷ ಪೂರೈಸುವ ಮೊದಲು ವಿವಾಹವಾಗತಕ್ಕದ್ದಲ್ಲ.
ಆಯ್ಕೆಯಾದ ಫಲಾನುಭವಿಯು ಮೇಲೆ ತಿಳಿಸಿದ ಅರ್ಹತೆಯ ಮಾನದಂಡಗಳಲ್ಲಿನ ಯಾವುದೇ ಒಂದು ಷರತ್ತುನ್ನು ಪೂರೈಸದಿದ್ದಲ್ಲಿಯೂ ಸಹ ಸೌಲಭ್ಯವನ್ನು ಮುಟ್ಟುಗೋಲು ಹಾಕಲಾಗುವುದು.

]]>
Fri, 30 May 2025 12:11:39 +0530 shivuagrico
Karnataka rain alert&ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ,ಯಾವ ಜಿಲ್ಲೆಗೆ ರೆಡ್,ಯೆಲ್ಲೊ ಅಲರ್ಟ್? https://krushirushi.in/karnataka-rain-alert-2130 https://krushirushi.in/karnataka-rain-alert-2130 Karnataka rain alert-ಇಂದಿನಿಂದ ಮುಂದಿನ 6 ದಿನಗಳ ಮಳೆ ಮಾಹಿತಿ,ಯಾವ ಜಿಲ್ಲೆಗೆ ರೆಡ್,ಯೆಲ್ಲೊ ಅಲರ್ಟ್?


ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದಲ್ಲಿ ಇಂದಿನಿಂದ 6 ದಿನ ಗುಡುಗು- ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 



ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮೇ 29ರಂದು ರೆಡ್ ಅಲರ್ಟ್ ನೀಡಲಾಗಿದೆ.

ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಧಾರವಾಡ, ಬೀದರ್, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. 

ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮೇ 30ರಂದು ರೆಡ್ ಅಲರ್ಟ್ ನೀಡಲಾಗಿದೆ. ಉಡುಪಿ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ತುಮಕೂರು, ಮಂಡ್ಯ, ಚಿತ್ರದುರ್ಗ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಮೇ 31 ರಂದು ಕರಾವಳಿಯ ಎಲ್ಲಾ ಜಿಲ್ಲೆಗಳು ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮೇ 30ರ ತನಕ ಉತ್ತರ ಕನ್ನಡ ಸಾಮಾನ್ಯ ಹಾಗೂ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಮೇ 31ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜೂನ್ 1ರಿಂದ ಮಳೆ ಮತ್ತಷ್ಟು ಕ್ಷೀಣಿಸುವ ಸಾಧ್ಯತೆಗಳಿದ್ದು, ಜೂನ್ 4ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮೇ 30ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೇ 31ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. 

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ, ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಒಳನಾಡಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಉತ್ತಮ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಬಂಗ್ಲಾದೇಶದ ಕರಾವಳಿ ಮೂಲಕ ಭೂ ಪ್ರವೇಶಿಸಿದ್ದು, ಅಲ್ಲೇ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ಇದರೊಂದಿಗೆ ಮುಂಗಾರು ಮಾರುತಗಳು ದುರ್ಬಲವಾಗುವ ಸಾಧ್ಯತೆ ಕಾಣಿಸುತ್ತಿದೆ. 
ಮುಂದಿನ 2 ದಿವಸಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಜೊತೆಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

]]>
Fri, 30 May 2025 00:13:27 +0530 shivuagrico
Akrama sakrama&ಕೃಷಿ ಪಂಪಸೆಟ್ ಅಕ್ರಮ ಸಕ್ರಮ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ https://krushirushi.in/Akrama-sakrama-2129 https://krushirushi.in/Akrama-sakrama-2129 Akrama sakrama-ಕೃಷಿ ಪಂಪಸೆಟ್ ಅಕ್ರಮ ಸಕ್ರಮ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ

ಅಕ್ರಮ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ನವೀಕೃತ ಶೀಘ್ರ ಸಂಪರ್ಕ ಯೋಜನೆ ಜಾರಿಗೆ ತಂದಿದ್ದು, ರೈತರು ಸ್ವಯಂ ಮೂಲ ಸೌಕರ್ಯ ಕಲ್ಪಿಸಿಕೊಂಡರೆ ಎಸ್ಕಾಂ ವತಿಯಿಂದ ಟ್ರಾನ್ಸ್ ಫಾರ್ಮರ್ ಒದಗಿಸಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆಯಜಾರ್ಜ್ ಹೇಳಿದ್ದಾರೆ.


ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನ ಪ್ರತಿನಿಧಿಗಳು ಮತ್ತು ಇಲಾಖೆಯ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, "2023ರ ಸೆ. 22ರ ಬಳಿಕ ಸ್ಥಾಪಿಸಿರುವ ಅಕ್ರಮ ಕೃಷಿ ಪಂಪ್ ಸೆಟ್ ಗಳಿಗೆ ರೈತರು ಸ್ವಂತ ವೆಚ್ಚದಲ್ಲಿ ಲೈನ್ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಿಕೊಂಡರೆ ಎರಡು ಅಥವಾ ಅದಕ್ಕಿಂತ ಹೆಚ್ಚು ಪಂಪ್ ಸೆಟ್ ಗಳಿಗೆ ಎಸ್ಕಾಂಗಳ ವತಿಯಿಂದಲೇ ಟ್ರಾನ್ಸ್ ಫಾರ್ಮರ್ ಒದಗಿಸಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗುವುದು," ಎಂದರು.

"ರಾಜ್ಯದಲ್ಲಿ 2004ರಲ್ಲಿ ಕೃಷಿ ಪಂಪ್ ಸೆಟ್ ಗಳ ಅಕ್ರಮ-ಸಕ್ರಮ ಯೋಜನೆ ಜಾರಿಗೆ ಬಂದಿತ್ತಾದರೂ 2023ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ 4.5 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಗಳು ಇದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ 2023ರ ಸೆ. 22ಕ್ಕೆ ಮುನ್ನ ಸಂಪರ್ಕ ಪಡೆದಿದ್ದ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು ನಿರ್ಧರಿಸಿ ಈವರೆಗೆ 2.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಿದೆ. ಉಳಿದವುಗಳನ್ನು ಇನ್ನು ಒಂದು ವರ್ಷದೊಳಗೆ ಸಕ್ರಮಗೊಳಿಸಲಾಗುವುದು", ಎಂದು ತಿಳಿಸಿದರು.

"ಆದರೆ, 2023ರ ಸೆ. 22ರ ಬಳಿಕ ಸ್ಥಾಪಿಸಲಾದ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು ಕಾನೂನಿನಲ್ಲಿ ಅವಕಾಶ ಇರಲಿಲ್ಲ. ಈ ಹಿನ್ನೆಲೆಯಲ್ಲಿ ನವೀಕೃತ ಶೀಘ್ರ ಸಂಪರ್ಕ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಅಕ್ರಮ ಪಂಪ್ ಸೆಟ್ ಹೊಂದಿರುವ ರೈತರು ಎಸ್ಕಾಂಗಳಿಗೆ ನಿಗದಿತ ಠೇವಣಿ ಪಾವತಿಸಿ ಅವರ ವೆಚ್ಚದಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು. ಅದಾದ ಬಳಿಕ 2 ಅಥವಾ ಅದಕ್ಕಿಂತ ಹೆಚ್ಚಿನ ಪಂಪ್ ಸೆಟ್ ಗಳಿಗೆ ಅವುಗಳ ಸಾಮರ್ಥ್ಯ ಆಧರಿಸಿ ಎಸ್ಕಾಂಗಳ ವತಿಯಿಂದ ಟ್ರಾನ್ಸ್ ಫಾರ್ಮರ್ ಒದಗಿಸಿ ಸಂಪರ್ಕ ಸಕ್ರಮಗೊಳಿಸಲಾಗುವುದು", ಎಂದು ಹೇಳಿದರು.

"ನವೀಕೃತ ಶೀಘ್ರ ಸಂಪರ್ಕ ಯೋಜನೆಯು ವಿದ್ಯುತ್ ಜಾಲದಿಂದ 500 ಮೀಟರ್ ಒಳಗಿರುವ ಎಲ್ಲಾ ಕೃಷಿ ಪಂಪ್ ಸೆಟ್ ಗಳಿಗೆ ಅನ್ವಯವಾಗುತ್ತದೆ. ವಿದ್ಯುತ್ ಜಾಲದಿಂದ 500 ಮೀಟರ್ ಗಿಂತ ದೂರ ಇರುವ ಪಂಪ್ ಸೆಟ್ ಗಳಿಗೆ ಸೋಲಾರ್ ಪಂಪ್ ಸೆಟ್ ಗಳನ್ನು ಕಡ್ಡಾಯವಾಗಿ ಅಳವಡಿಸಬೇಕಾಗುತ್ತದೆ. ಸೋಲಾರ್ ಪಂಪ್ ಸೆಟ್ ಗಳಿಗೆ ಕುಸುಮ್- ಬಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಶೇ. 30, ರಾಜ್ಯ ಸರ್ಕಾರದಿಂದ ಶೇ. 50ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಶೇ. 20ರಷ್ಟು ಮೊತ್ತವನ್ನು ಮಾತ್ರ ರೈತರು ಪಾವತಿಸಬೇಕು", ಎಂದು ತಿಳಿಸಿದರು.

ವಿದ್ಯುತ್ ಸಂಪರ್ಕಕ್ಕೆ ಒಸಿ ಸಮಸ್ಯೆ ಕುರಿತು ಸಂಪುಟದಲ್ಲಿ ನಿರ್ಣಯ:

"ಸ್ವಾಧೀನಾನುಭವ ಪತ್ರ (ಒಸಿ) ಹೊಂದಿಲ್ಲದ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳಿಗೂ ವಿದ್ಯುತ್‌ ಸಂಪರ್ಕ ನೀಡಬಾರದು ಎಂಬ ಇಂಧನ ಇಲಾಖೆ ನಿಯಮದಿಂದ ಸಾಕಷ್ಟು ಸಮಸ್ಯೆಗಳಾಗುತ್ತಿರುವ ಬಗ್ಗೆ ಸಭೆಯಲ್ಲಿ ಶಾಸಕರು ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಸಚಿವ ಕೆ.ಜೆ.ಜಾರ್ಜ್, ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇಂಧನ ಇಲಾಖೆ ಈ ನೀತಿ ಜಾರಿಗೆ ತಂದಿದೆ. ಇದರಿಂದ ಸಮಸ್ಯೆಗಳಾಗುತ್ತಿರುವುದು ಸರ್ಕಾರದ ಗಮನದಲ್ಲಿದ್ದು, ಸಚಿವ ಸಂಪುಟ ಸಭೆಯಲ್ಲೂ ಚರ್ಚಿಸಿ ಇದಕ್ಕೆ ಪರಿಹಾರ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಧಿಕಾರಿಗಳು ಸೂಕ್ತ ಪರಿಹಾರ ಸಿದ್ಧಪಡಿಸಿದ ಬಳಿಕ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ಜನರ ಸಮಸ್ಯೆ ಬಗೆಹರಿಸಲಾಗುವುದು", ಎಂದರು.

"ಮನೆಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುವ ಪಿಎಂ ಸೂರ್ಯ ಘರ್ ಯೋಜನೆಯನ್ನು ಅಳವಡಿಸಿಕೊಳ್ಳುವಂತೆ ಮಾಸಿಕ 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸುವ ಗ್ರಾಹಕರನ್ನು ಒಪ್ಪಿಸುವ ಕಾರ್ಯಕ್ಕೆ ಮುಂದಾಗಬೇಕು. ಆಯಾ ವಿಭಾಗದ ಜನಪ್ರತಿನಿಧಿಗಳ ಜತೆ ಆಗಾಗ್ಗೆ ಸಮಾಲೋಚಿಸಿ ಇಂಧನ ಇಲಾಖೆಗೆ ಸಂಬಂಧಿಸಿದ ಕೆಲಸಗಳನ್ನು ನಿರ್ವಹಿಸಬೇಕು", ಎಂದು ಸಚಿವರು ಇದೇ ವೇಳೆ ಅಧಿಕಾರಿಗಳಿಗೆ ಸೂಚಿಸಿದರು.

ಜೂನ್ ಅಂತ್ಯದೊಳಗೆ ಲೈನ್ ಮೆನ್ ನೇಮಕ:

"ರಾಜ್ಯದಲ್ಲಿ 3000 ಲೈನ್ ಮೆನ್ ಗಳ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ದೈಹಿಕ ತರಬೇತಿ ನಡೆಯುತ್ತಿದೆ. ಜೂನ್ ಅಂತ್ಯದೊಳಗೆ ಎಲ್ಲರಿಗೂ ಸ್ಥಳ ನಿಯುಕ್ತಿ ಮಾಡಿ ನೇಮಕಾತಿ ಆದೇಶ ಹೊರಡಿಸಲಾಗುವುದು", ಎಂದು ಹೇಳಿದರು.

"ಮಳೆಗಾಲ ಈಗಾಗಲೇ ಆರಂಭವಾಗಿರುವುದರಿಂದ ಯಾವುದೇ ಸಮಸ್ಯೆ ಎದುರಾದರೂ ತಕ್ಷಣ ಬಗೆಹರಿಸಲು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವುದರ ಜತೆಗೆ ಹೆಚ್ಚುವರಿ ಸಲಕರಣೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಈಗಾಗಲೇ ಸೂಚಿಸಲಾಗಿದೆ. ಜೂನ್ ಅಂತ್ಯದ ವೇಳೆ ಲೈನ್ ಮೆನ್ ಗಳ ನೇಮಕವೂ ಆಗುವುದರಿಂದ ಮಳೆ- ಗಾಳಿಯಿಂದ ಹೆಚ್ಚು ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಹಾಯವಾಗಲಿದೆ", ಎಂದರು.

ಕುಸುಮ್-ಸಿ ಅಡಿ 117 ಮೆ.ವ್ಯಾ. ವಿದ್ಯುತ್:

"ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯಲ್ಲಿ ಕುಸುಮ್-ಸಿ ಯೋಜನೆಯಡಿ ಕೃಷಿ ಫೀಡರ್ ಗಳ ಸೋಲರೈಸೇಷನ್ ಮೂಲಕ 117 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ 21 ಸ್ಥಳಗಳನ್ನು ಗುರುತಿಸಲಾಗಿದ್ದು, 156 ಕಡೆ ಈಗಾಗಲೇ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಸೂಕ್ತ ಭೂಮಿ ಸಿಗದಿದ್ದಲ್ಲಿ ಕೆರೆ ಅಂಗಳದಲ್ಲೂ ಕುಸುಮ್-ಸಿ ಯೋಜನೆಯಡಿ ಸೋಲಾರ್ ಫಲಕಗಳನ್ನು ಅಳವಡಿಸಲಾಗುವುದು", ಎಂದು ತಿಳಿಸಿದರು.

"ಜಿಲ್ಲೆಯ ಅರಣ್ಯ ಭಾಗಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ರಾತ್ರಿ ವೇಳೆ ವನ್ಯ ಜೀವಿಗಳ ಹಾವಳಿ ಎದುರಾಗುತ್ತದೆ. ಹೀಗಾಗಿ ರೈತರ ಪಂಪ್ ಸೆಟ್ ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಒದಗಿಸುವಂತೆ ಸ್ಥಳಿಯ ಶಾಸಕರು ಮನವಿ ಮಾಡಿಕೊಂಡಾಗ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ಹಗಲು ವೇಳೆ 7 ಗಂಟೆ ವಿದ್ಯುತ್ ಒದಗಿಸಲು ಆದೇಶ ಹೊರಡಿಸಿದ್ದು, ಅದರಂತೆ ಕಾರ್ಯ ನಿರ್ವಹಣೆ ನಡೆಯುತ್ತಿದೆ. ತಾಂತ್ರಿಕ ಸಮಸ್ಯೆ ಇದ್ದರೆ ಮಾತ್ರ ಅಂತಹ ಪ್ರದೇಶಗಳಲ್ಲಿ ರಾತ್ರಿ ವೇಳೆ ವಿದ್ಯುತ್ ಒದಗಿಸಲಾಗುವುದು", ಎಂದರು.

ವಿಧಾನಸಭೆ ಸದಸ್ಯರಾದ ಎಚ್.ಎ. ಇಕ್ಬಾಲ್ ಹುಸೇನ್, ಎಚ್.ಸಿ.ಬಾಲಕೃಷ್ಣ, ಸಿ.ಪಿ.ಯೋಗೇಶ್ವರ್, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳು ಸಭೆಯಲ್ಲಿದ್ದರು.

]]>
Thu, 29 May 2025 17:13:02 +0530 shivuagrico
Bembala bele&ಭತ್ತ,ರಾಗಿ ಸೇರಿದಂತೆ 14 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ, ಯಾವ ಬೆಳೆಗೆ ಎಷ್ಟು ಹೆಚ್ಚಳ? https://krushirushi.in/Bembala-bele-2128 https://krushirushi.in/Bembala-bele-2128 Bembala bele-ಭತ್ತ,ರಾಗಿ ಸೇರಿದಂತೆ 14 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ(MSP)


2025-26ನೇ ಸಾಲಿನ ಮಾರುಕಟ್ಟೆ ಋತುವಿನಲ್ಲಿ 14 ಪ್ರಮುಖ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ರೈತರು ಬಿತ್ತನೆ ಮಾಡುವ ಮೊದಲು ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಸರ್ಕಾರ ಪ್ರತಿ ವರ್ಷ ಪರಿಷ್ಕರಿಸುತ್ತದೆ, ಇದರಿಂದಾಗಿ ಬೆಳೆಗಾರರಿಗೆ ಅವರ ಉತ್ಪನ್ನಗಳಿಗೆ ಲಾಭದಾಯಕ ಬೆಲೆಗಳು ದೊರೆಯುತ್ತವೆ.


ಈ ವರ್ಷ, ಹಿಂದಿನ ವರ್ಷಕ್ಕಿಂತ ಅತ್ಯಧಿಕ MSP ಹೆಚ್ಚಳವನ್ನು ನೈಜರ್ ಬೀಜ, ನಂತರ ರಾಗಿ, ಹತ್ತಿ ಮತ್ತು ಎಳ್ಳು ಶಿಫಾರಸು ಮಾಡಲಾಗಿದೆ.

ದ್ವಿದಳ ಧಾನ್ಯಗಳು ತೊಗರಿ ಮತ್ತು ಹೆಸರುಕಾಳುಗಳಿಗೆ ಕ್ರಮವಾಗಿ ರೂ 450 ಮತ್ತು ರೂ 86 ಹೆಚ್ಚಿಸಲಾಗಿದೆ. ಉದ್ದಿನ ಬೇಳೆಗೆ ಕನಿಷ್ಠ ಬೆಂಬಲ ಬೆಲೆಯನ್ನು 400 ರೂ. ಹೆಚ್ಚಿಸಲಾಗಿದೆ.

ಎಣ್ಣೆ ಬೀಜಗಳ ವಿಷಯಕ್ಕೆ ಬಂದರೆ, ನೆಲಗಡಲೆ, ಸೂರ್ಯಕಾಂತಿ ಬೀಜ ಮತ್ತು ಸೋಯಾಬೀನ್‌ಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕ್ರಮವಾಗಿ 480 ರೂ., 441 ರೂ. ಮತ್ತು 436 ರೂ. ಹೆಚ್ಚಿಸಲಾಗಿದೆ.

ಹತ್ತಿಯ ವಿಷಯದಲ್ಲಿ, ಕನಿಷ್ಠ ಬೆಂಬಲ ಬೆಲೆಯನ್ನು 589 ರೂ. ಹೆಚ್ಚಿಸಲಾಗಿದೆ. ಭತ್ತಕ್ಕೆ ರೂ 69 ಹೆಚ್ಚಿಸಲಾಗಿದೆ.

2025-26 ರ ಮಾರುಕಟ್ಟೆ ಋತುವಿನಲ್ಲಿ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು 2018-19 ರ ಕೇಂದ್ರ ಬಜೆಟ್‌ನಲ್ಲಿ ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ನಿಗದಿಪಡಿಸುವ ಘೋಷಣೆಗೆ ಅನುಗುಣವಾಗಿದೆ.

]]>
Thu, 29 May 2025 14:13:32 +0530 shivuagrico
Bele sala baddi manna&ಬೆಳೆಸಾಲ ಪಡೆದ ರೈತರಿಗೆ ಬಡ್ಡಿಮನ್ನಾ ಘೋಷಿಸಿದ ಕೇಂದ್ರ ಸರ್ಕಾರ https://krushirushi.in/Bele-sala-baddi-manna-2126 https://krushirushi.in/Bele-sala-baddi-manna-2126 Bele sala baddi manna-ಬೆಳೆಸಾಲ ಪಡೆದ ರೈತರಿಗೆ  3% ಬಡ್ಡಿಮನ್ನಾ  ಘೋಷಿಸಿದ ಕೇಂದ್ರ ಸರ್ಕಾರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು 2025-26ನೇ ಸಾಲಿಗೆ ಮಾರ್ಪಡಿಸಿದ ಬಡ್ಡಿ ಸಬ್ಸಿಡಿ ಯೋಜನೆಯ (MISS) ಮುಂದುವರಿಕೆಗೆ ಅನುಮೋದನೆ ನೀಡಿದೆ. ಈ ಯೋಜನೆಯು ಬಡ್ಡಿ ಸಬ್ಸಿಡಿ (IS) ಅಂಶವನ್ನು ಒಳಗೊಂಡಿದೆ, ಇದು 1.5% ರಷ್ಟು ಅಸ್ತಿತ್ವದಲ್ಲಿರುವ ದರದಲ್ಲಿ ಮುಂದುವರಿಯುತ್ತದೆ, ಕಿಸಾನ್ ಕ್ರೆಡಿಟ್ ಕಾರ್ಡ್ (KCC) ವ್ಯವಸ್ಥೆಯ ಮೂಲಕ ರೈತರಿಗೆ ಕೈಗೆಟುಕುವ ಅಲ್ಪಾವಧಿ ಸಾಲವನ್ನು ಖಚಿತಪಡಿಸುತ್ತದೆ.

 
ಮಾರ್ಪಡಿಸಿದ ಬಡ್ಡಿ ಸಬ್ಸಿಡಿ ಯೋಜನೆ (MISS) ಬಡ್ಡಿ ಪರಿಹಾರವನ್ನು ನೀಡುವ ಮೂಲಕ ರೈತರಿಗೆ ಅಲ್ಪಾವಧಿಯ ಸಾಂಸ್ಥಿಕ ಸಾಲವನ್ನು ಹೆಚ್ಚು ಪ್ರವೇಶಿಸುವಂತೆ ಮಾಡಲು ವಿನ್ಯಾಸಗೊಳಿಸಲಾದ ಕೇಂದ್ರ ವಲಯ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ:

ರೈತರು ₹3 ಲಕ್ಷದವರೆಗೆ ಅಲ್ಪಾವಧಿಯ KCC ಸಾಲಗಳನ್ನು 7% ಸಬ್ಸಿಡಿ ಬಡ್ಡಿ ದರದಲ್ಲಿ ಪಡೆಯಬಹುದು, ಅರ್ಹ ಸಾಲ ನೀಡುವ ಸಂಸ್ಥೆಗಳಿಗೆ 1.5% ಬಡ್ಡಿ ಸಬ್ಸಿಡಿಯನ್ನು ನೀಡಲಾಗುತ್ತದೆ.
ತಮ್ಮ ಸಾಲಗಳನ್ನು ಸಮಯಕ್ಕೆ ಮರುಪಾವತಿ ಮಾಡುವವರು 3% ವರೆಗೆ ಹೆಚ್ಚುವರಿ ಪ್ರಾಂಪ್ಟ್ ಮರುಪಾವತಿ ಪ್ರೋತ್ಸಾಹ (PRI) ಪಡೆಯಬಹುದು, ಇದು ಅವರ ಪರಿಣಾಮಕಾರಿ ಬಡ್ಡಿ ದರವನ್ನು 4% ಕ್ಕೆ ಇಳಿಸುತ್ತದೆ.
ಪಶುಸಂಗೋಪನೆ ಮತ್ತು ಮೀನುಗಾರಿಕೆಯಂತಹ ಸಂಬಂಧಿತ ಚಟುವಟಿಕೆಗಳಿಗೆ ಪ್ರತ್ಯೇಕವಾಗಿ ತೆಗೆದುಕೊಂಡ ಸಾಲಗಳಿಗೆ, ₹2 ಲಕ್ಷದವರೆಗಿನ ಸಾಲಗಳ ಮೇಲೆ ಬಡ್ಡಿ ಪ್ರಯೋಜನವು ಅನ್ವಯಿಸುತ್ತದೆ.
ಮುಂಬರುವ ಹಣಕಾಸು ವರ್ಷಕ್ಕೆ ಯೋಜನೆಯಲ್ಲಿ ಯಾವುದೇ ರಚನಾತ್ಮಕ ಬದಲಾವಣೆಗಳನ್ನು ಮಾಡಲಾಗಿಲ್ಲ.
ಪ್ರಸ್ತುತ, ದೇಶಾದ್ಯಂತ 7.75 ಕೋಟಿಗೂ ಹೆಚ್ಚು KCC ಖಾತೆಗಳಿವೆ. ಕೃಷಿಗೆ ಸಾಂಸ್ಥಿಕ ಸಾಲದ ಸ್ಥಿರ ಹರಿವನ್ನು ಖಚಿತಪಡಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುವುದರಿಂದ ಈ ಬೆಂಬಲವನ್ನು ಮುಂದುವರಿಸುವ ಮಹತ್ವವನ್ನು ಸಚಿವ ಸಂಪುಟವು ಒತ್ತಿ ಹೇಳಿದೆ. ಇದು ಕೃಷಿ ಉತ್ಪಾದಕತೆಯನ್ನು ಸುಧಾರಿಸಲು ಮತ್ತು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆರ್ಥಿಕ ಸೇರ್ಪಡೆಯನ್ನು ಖಚಿತಪಡಿಸಲು ಸಹಾಯ ಮಾಡುತ್ತದೆ.

ಕೃಷಿ ಸಾಲದಲ್ಲಿನ ಪ್ರಮುಖ ಸಾಧನೆಗಳು

KCC ಮೂಲಕ ಸಾಂಸ್ಥಿಕ ಸಾಲ ವಿತರಣೆಯು 2014 ರಲ್ಲಿ ₹4.26 ಲಕ್ಷ ಕೋಟಿಯಿಂದ ಡಿಸೆಂಬರ್ 2024 ರ ವೇಳೆಗೆ ₹10.05 ಲಕ್ಷ ಕೋಟಿಗೆ ಏರಿಕೆಯಾಗಿದೆ.
ಒಟ್ಟಾರೆ ಕೃಷಿ ಸಾಲದ ಹರಿವು ಹಣಕಾಸು ವರ್ಷ 2013-14 ರಲ್ಲಿ ₹7.3 ಲಕ್ಷ ಕೋಟಿಯಿಂದ ಹಣಕಾಸು ವರ್ಷ 2023-24 ರಲ್ಲಿ ₹25.49 ಲಕ್ಷ ಕೋಟಿಗೆ ಗಮನಾರ್ಹವಾಗಿ ಬೆಳೆದಿದೆ.
ಆಗಸ್ಟ್ 2023 ರಲ್ಲಿ ಕಿಸಾನ್ ರಿನ್ ಪೋರ್ಟಲ್ (KRP) ಅನ್ನು ಪ್ರಾರಂಭಿಸುವಂತಹ ಸುಧಾರಣೆಗಳು ಸಾಲ ಸಂಸ್ಕರಣೆ ಮತ್ತು ಹಕ್ಕುಗಳಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸಿವೆ.
ಮಧ್ಯಮ MCLR ಮತ್ತು ರೆಪೊ ದರದ ಚಲನೆಗಳನ್ನು ಒಳಗೊಂಡಂತೆ ಪ್ರಸ್ತುತ ಬಡ್ಡಿ ದರದ ಪ್ರವೃತ್ತಿಗಳನ್ನು ಗಮನಿಸಿದರೆ, ಗ್ರಾಮೀಣ ಸಹಕಾರಿ ಬ್ಯಾಂಕ್‌ಗಳಿಗೆ ಮತ್ತು ಭಾರತದ ಕೃಷಿ ಸಮುದಾಯಕ್ಕೆ ಕಡಿಮೆ ವೆಚ್ಚದ ಸಾಲವನ್ನು ನೀಡುವುದನ್ನು ಮುಂದುವರಿಸಲು 1.5% ಬಡ್ಡಿ ಸಬ್ಸಿಡಿಯನ್ನು ಕಾಯ್ದುಕೊಳ್ಳುವುದು ಅತ್ಯಗತ್ಯವೆಂದು ಪರಿಗಣಿಸಲಾಗಿದೆ.

ರೈತರ ಆದಾಯವನ್ನು ದ್ವಿಗುಣಗೊಳಿಸುವ, ಸ್ಥಿತಿಸ್ಥಾಪಕ ಗ್ರಾಮೀಣ ಸಾಲ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಮತ್ತು ಕೈಗೆಟುಕುವ ಸಾಲ ಪ್ರವೇಶದ ಮೂಲಕ ಕೃಷಿ ಬೆಳವಣಿಗೆಯನ್ನು ಹೆಚ್ಚಿಸುವ ಸರ್ಕಾರದ ಬಲವಾದ ಬದ್ಧತೆಯನ್ನು ಈ ನಿರ್ಧಾರವು ಮತ್ತೊಮ್ಮೆ ದೃಢಪಡಿಸುತ್ತದೆ ಎಂದು ಸಚಿವ ಸಂಪುಟವು ಒತ್ತಿ ಹೇಳಿದೆ.

Bele sala baddi manna-ಈ ಯೋಜನೆಯಡಿ ಸಿಗಲಿದೆ ನಿಮ್ಮ ಸಾಲದ ಮೇಲೆ 3% ಬಡ್ಡಿ ಮನ್ನಾ,ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

 ಕೇಂದ್ರ ವಲಯದ ಯೋಜನೆ ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಸರ್ಕಾರವು ಹಣಕಾಸು ಸೌಲಭ್ಯಗಳನ್ನು ಒದಗಿಸುತ್ತಿದ್ದು, ರೂ. 2 ಕೋಟಿ ಸಾಲದ ಮೊತ್ತಕ್ಕೆ ವಾರ್ಷಿಕ ಶೇ. 3ರಂತೆ 7 ವರ್ಷದ ಅವಧಿಗೆ ಬಡ್ಡಿ ಸಹಾಯಧನ ಲಭ್ಯವಿರುತ್ತದೆ.


ಅರ್ಹ ಕೃಷಿ ಚಟುವಟಿಕೆಗಳು/ಯೋಜನೆಗಳು ಈ ಕೆಳಗಿನಂತಿವೆ

ಇ-ಮಾರುಕಟ್ಟೆ ವೇದಿಕೆ ಸೇರಿದಂತೆ ಸರಬರಾಜು ಸರಪಳಿ ಸೇವೆಗಳು ಗೋದಾಮುಗಳು ಮತ್ತು ಸೈಲೊಗಳು + ಪ್ಯಾಕ್ ಹೌಸ್‌ಗಳು ವಿಂಗಡಣೆ ಮತ್ತು ಶ್ರೇಣೀಕರಣ ಘಟಕಗಳು ಶೀತಲಗೃಹ ಸರಪಳಿಗಳು ಸಾಗಾಣಿಕೆ ಸೌಲಭ್ಯಗಳು ಪ್ರಾಥಮಿಕ ಸಂಸ್ಕರಣಾ ಕೇಂದ್ರಗಳು ಹಣ್ಣು ಮಾಗಿಸುವ ಘಟಕಗಳು

ಮೌಲ್ಯಮಾಪನ ಘಟಕಗಳು ಸಂಕುಚಿತ ಜೈವಿಕ ಅನಿಲ (CBG) ಸ್ಥಾವರ + ಸಾವಯವ ಪರಿಕರ ಉತ್ಪಾದನೆ + ಜೈವಿಕ ಉತ್ತೇಜಕ ಉತ್ಪಾದನಾ ಘಟಕಗಳು * ಸಸ್ಯ ನರ್ಸರಿ /ಅಂಗಾಂಶ ಕೃಷಿ ಬೀಜ ಸಂಸ್ಕರಣೆ + ಕೃಷಿ ಯಂತ್ರಧಾರೆ ಕೇಂದ್ರಗಳು ಸ್ಮಾರ್ಟ್ ಮತ್ತು ನಿಖರವಾದ ಕೃಷಿ ಸಂಯೋಜಿತ ಸ್ಪಿರುಲಿನಾ ಉತ್ಪಾದನೆ ಮತ್ತು ಸಂಸ್ಕರಣಾ ಘಟಕಗಳು ರೇಷ್ಮೆ ಕೃಷಿ ಸಂಸ್ಕರಣಾ ಘಟಕ • ಜೇನು ಸಂಸ್ಕರಣಾ ಘಟಕ ಪ್ಲಾಂಟ್ ಕ್ಯಾರಂಟೈನ್ ಘಟಕಗಳು ಮತ್ತು ಸಾಮೂಹಿಕ ಕೃಷಿ ಅಡಿ: ಜಲಕೃಷಿ, ವಾಯುಕೃಷಿ, ಹಸಿರುಮನೆ, ಬಹುಮಹಡಿ ಕೃಷಿ, ಅಣಬೆ ಬೇಸಾಯ

ಅರ್ಹ ಫಲಾನುಭವಿಗಳು

ರೈತರು/ ರೈತ ಉತ್ಪಾದಕ ಸಂಸ್ಥೆಗಳು, ಪ್ರಾಂತೀಯ ಸಹಕಾರ ಒಕ್ಕೂಟಗಳು ಕೃಷಿ ಉದ್ಯಮಿಗಳು / ನವೋದ್ಯಮಿಗಳು ಪ್ರಾಥಮಿಕ ಕೃಷಿ ಕ್ರೆಡಿಟ್ ಸಹಕಾರ ಸಂಘಗಳು + ವಿವಿಧೋದ್ದೇಶ ಸಹಕಾರ ಸಂಘಗಳು * ಸ್ವ-ಸಹಾಯ ಗುಂಪುಗಳು / ಜಂಟಿ ಬಾಧ್ಯತಾ ಗುಂಪುಗಳು / ಖಾಸಗಿ ಮಾಲೀಕತ್ವ ಸಂಸ್ಥೆಗಳು.
ಯೋಜನೆಯಲ್ಲಿ ಭಾಗವಹಿಸುವ ಹಣಕಾಸು ಸಂಸ್ಥೆಗಳು:
ರಾಷ್ಟ್ರೀಕೃತ ಬ್ಯಾಂಕುಗಳು + ಶೆಡ್ಯೂಲ್ಡ್ ಸಹಕಾರಿ ಬ್ಯಾಂಕ್ ಗಳು + ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ ಗಳು ಸಣ್ಣ ಹಣಕಾಸು ಬ್ಯಾಂಕುಗಳು + ಬ್ಯಾಂಕೇತರ ಹಣಕಾಸು ಸಂಸ್ಥೆಗಳು + ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (ಎನ್ ಸಿಡಿಸಿ).

ಅರ್ಜಿ ಸಲ್ಲಿಕೆ ಪ್ರಕ್ರಿಯೆ


ಮೊದಲು ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://agriinfra.dac.gov.in/Home/Login

ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ Beneficiary ಮೇಲೆ ಕ್ಲಿಕ್ ಮಾಡಿ
ನಂತರ Benefit under other scheme ಮೇಲೆ ಕ್ಲಿಕ್ ಮಾಡಿ

ನಂತರ ನೀವು ಅರ್ಜಿ ಸಲ್ಲಿಸಲು ಬಯಸುವ ಯೋಜನೆಯ ಮೇಲೆ ಕ್ಲಿಕ್ ಮಾಡಿ
ಉದಾಹರಣೆಗೆ ಈಗಾಗಲೇ ನೀವು PMFME ಯೋಜನೆಯ ಫಲಾನುಭವಿಗಳಾಗಿದ್ದು,ನಿಮ್ಮ ಸಾಲದ ಮೇಲೆ 3% ಬಡ್ಡಿ ಸಬ್ಸಿಡಿ ಪಡೆಯಬಹುದು

ನಂತರ ನಿಮ್ಮ ಹೆಸರು, ಮೊಬೈಲ್ ನಂಬರ್, ಆಧಾರ್ ನಂಬರ್ ಹಾಕಿ Send OTP ಮೇಲೆ ಕ್ಲಿಕ್ ಮಾಡಿ,ಮೊಬೈಲ್ ಗೆ ಬರುವ OTP ಹಾಕಿ Register ಮಾಡಿ

ನಿಮ್ಮ ಮೊಬೈಲ್ ಗೆ ID ಮತ್ತು password ಬರುತ್ತದೆ,ಅದನ್ನು ಹಾಕಿ ಲಾಗಿನ್ ಮಾಡಿ

ನಂತರ setting icon ಮೇಲೆ ಕ್ಲಿಕ್ ಮಾಡಿ Apply for interest subvention under other scheme ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಮಾಹಿತಿ ತುಂಬಿ,ನಿಮ್ಮ ಬ್ಯಾಂಕ್ ನ ಲೋನ್ Saction letter ಹಾಗೂ ಯೋಜನಾ ವರದಿಯನ್ನು ಅಪ್ಲೌಡ್ ಮಾಡಿ,Submit ಮೇಲೆ ಕ್ಲಿಕ್ ಮಾಡಿ


CPMU, ಕೃಷಿ ಮತ್ತು ರೈ ಕಲ್ಯಾಣ ಮಂತ್ರಾಲಯದ ಮೂಲಕ ಪರಿಶೀಲಿಸಲಾದ ಅರ್ಜಿಯನ್ನು ಬ್ಯಾಂಕ್‌ ಶಾಖೆಗೆ ಆನ್‌ ಲೈನ್‌ ನಲ್ಲಿ ವರ್ಗಾಯಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕೃಷಿ/ತೋಟಗಾರಿಕೆ ಇಲಾಖೆ, ಜಿಲ್ಲಾ ನಬಾರ್ಡ್‌ ವ್ಯವಸ್ಥಾಪಕರು, ನಿಮ್ಮ ವ್ಯಾಪ್ತಿಯ ಬ್ಯಾಂಕ್/‌ ಹಣಕಾಸು ಸಂಸ್ಥೆಗಳನ್ನು ಸಂಪರ್ಕಿಸಬಹುದು.

]]>
Thu, 29 May 2025 11:42:46 +0530 shivuagrico
Subsidy seed rate list&ಕೃಷಿ ಇಲಾಖೆಯಲ್ಲಿ ಸಬ್ಸಿಡಿ ದರದಲ್ಲಿ ಸಿಗುವ ಬೀಜಗಳು ಹಾಗೂ ದರಪಟ್ಟಿ https://krushirushi.in/Subsidy-seed-rate-list-2125 https://krushirushi.in/Subsidy-seed-rate-list-2125 Subsidy seed rate list-ಕೃಷಿ ಇಲಾಖೆಯಲ್ಲಿ ಸಬ್ಸಿಡಿ ದರದಲ್ಲಿ ಸಿಗುವ ಬೀಜಗಳು ಹಾಗೂ ದರಪಟ್ಟಿ

ಸಸ್ಯಗಳ  ಬೆಳವಣೆಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಆಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತದೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು ಕ್ಯಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಬ್ಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಲಘು ಪೋಷಕಾಂಶದ ಕೊರತೆಯಾದರು ಸಸ್ಯಗಳ ಬೆಳವಣೆಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.

ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದಲೇ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಆನಿವಾರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯುವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು, ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರೆವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿರುತ್ತದೆ.
ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ. ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಆಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ.

ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ, ರಂಜಕ, ಪೊಟ್ಯಾಷ್ ರಸಗೊಬ್ಬರಗಳನ್ನು 4:2:1 ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಪ್ರಸ್ತುತ ರೈತರು ಯಥೇಚ್ಛವಾಗಿ ಬಳಸುತ್ತಿರುವ ಈ ರಸಗೊಬ್ಬರಗಳ ಅನುಪಾತವು 5.08:2.89:1 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಿ, ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸರಿದೂಗಿಸಬಹುದಾಗಿರುತ್ತದೆ.

ಅಲ್ಲದೇ, ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಆಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಡಿ.ಎ.ಪಿ. ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26. 22:32:16, 14:35:14, 17:17:17, 14:28:14, 19:19:19, 20:10:10 ಇತ್ಯಾದಿ ಬಳಸಬಹುದಾಗಿದೆ. ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕರು ಸಲಹೆ ನೀಡಿದೆ.

]]>
Wed, 28 May 2025 18:30:55 +0530 shivuagrico
Guarantee schemes&ಈ ಪಟ್ಟಿಯಲ್ಲಿರುವ ಅನರ್ಹರಿಗೆ ಜುಲೈ ತಿಂಗಳಿನಿಂದ ಗ್ಯಾರಂಟಿ ಯೋಜನೆಗಳು ಬಂದ್ https://krushirushi.in/Guarantee-schemes-2124 https://krushirushi.in/Guarantee-schemes-2124 Guarantee schemes-ಈ ಪಟ್ಟಿಯಲ್ಲಿರುವ ಅನರ್ಹರಿಗೆ ಜುಲೈ ತಿಂಗಳಿನಿಂದ ಗ್ಯಾರಂಟಿ ಯೋಜನೆಗಳು ಬಂದ್


ಜುಲೈ ತಿಂಗಳಿನಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.


ಕುಕನೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕುಕನೂರು, ಯಲಬುರ್ಗಾ ತಾಲೂಕಿನ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳಲ್ಲಿ ಅನರ್ಹ ಅನುಭವಿಗಳಿಗೂ ಯೋಜನೆಯ ಲಾಭ ಹೋಗುತ್ತಿದೆ. ಇದನ್ನು ತನಿಖೆ ನಡೆಸಿ ಕಡಿವಾಣ ಹಾಕುವ ಮೂಲಕ ಜುಲೈನಿಂದ ಲಾಭ ಸಿಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಒಂದು ವಿಧಾನಸಭಾ ಕ್ಷೇತ್ರಕ್ಕೆ ವರ್ಷಕ್ಕೆ ಗ್ಯಾರಂಟಿ ಯೋಜನೆಗಳಲ್ಲಿ ಅಂದಾಜು 250 ಕೋಟಿ ರೂಪಾಯಿ ನೀಡುತ್ತಿದ್ದು, ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿದೆ. ಆದರೆ, ಅರ್ಹರಲ್ಲದವರು ಸಹ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಈ ಬಗ್ಗೆ ರಾಜ್ಯಮಟ್ಟದಲ್ಲಿ ಅಧಿಕಾರಿಗಳ ತಂಡ ರಚಿಸಿದ ತನಿಖೆ ನಡೆಸಲು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.

ಮನೆ ಬಾಡಿಗೆ ನೀಡಿದ್ದರೂ ಸಹ ಅವರಿಗೆ ಉಚಿತ ಗೃಹ ಜ್ಯೋತಿ ಯೋಜನೆ ದೊರೆಯುತ್ತಿದೆ. ಗೃಹಲಕ್ಷ್ಮಿಯಲ್ಲಿ ತೆರಿಗೆ, ಜಿಎಸ್‌ಟಿ ಪಾವತಿಸುವ ಕುಟುಂಬ ಸದಸ್ಯರಿಗೆ ಹಣ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ ಯಲಬುರ್ಗಾ ಕ್ಷೇತ್ರದಲ್ಲಿ ಪಡಿತರ ಚೀಟಿಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ. ಈ ಕುರಿತಂತೆ ರಾಜ್ಯಾದ್ಯಂತ ತನಿಖೆ ಮಾಡಿಸಿ ಜುಲೈನಿಂದ ಅನರ್ಹರಿಗೆ ಯೋಜನೆಯ ಲಾಭ ಸಿಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

20 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ರದ್ದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಫಾರಸ್ಸು-Canceled ration card list

“ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.”
ಸಿದ್ದರಾಮಯ್ಯ, ಮುಖ್ಯಮಂತ್ರಿಗಳು

ಕಳೆದ ಜುಲೈ 8ರಂದು ವಿಧಾನಸೌಧದಲ್ಲಿ ರಾಜ್ಯದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸುವಂತೆ ಖಡಕ್ ಸೂಚನೆ ನೀಡಿದ್ದರು.


ರಾಜ್ಯದಲ್ಲಿ ಶೇ 80ರಷ್ಟು (1.27) ಬಿಪಿಎಲ್ ಕುಟುಂಬಗಳಿದ್ದು, 4.37 ಕೋಟಿ ಜನರು ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆಯುತ್ತಿದ್ದಾರೆ. ಹೊಸ ಕಾರ್ಡ್‌ಳಿಗೆ ಸಲ್ಲಿಕೆಯಾದ 2.95 ಲಕ್ಷ ಅರ್ಜಿಗಳು ವಿಲೇವಾರಿಗೆ ಬಾಕಿ ಇದ್ದು, ಅನರ್ಹ ಕಾರ್ಡ್ ರದ್ದುಗೊಳಿಸಿ ಅವುಗಳ ಬದಲಾಗಿ ಬಾಕಿ ಇರುವ ಅರ್ಜಿಗಳನ್ನು ಇತ್ಯರ್ಥ ಮಾಡುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಜಿಲ್ಲಾಧಿಕಾರಿಗಳು ಕಳೆದ ಆರು ತಿಂಗಳಲ್ಲಿ ಒಮ್ಮೆಯೂ ಪಡಿತರ ಪಡೆಯದ ಕುಟುಂಬಗಳನ್ನು ಪತ್ತೆ ಹಚ್ಚುವಂತೆ ಆಹಾರ ಮತು ನಾಗರಿಕ ಪೂರೈಕೆ ಇಲಾಖೆಗೆ ನಿರ್ದೇಶನ ನೀಡಿದ್ದು,20 ಲಕ್ಷಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ.

ಅನರ್ಹರು ಬಿಪಿಎಲ್‌ ಪಡಿತರ ಚೀಟಿ ಪಡೆಯುವುದನ್ನು ತಪ್ಪಿಸಲು ಪಹಣಿ, ವಾಹನ ನೋಂದಣಿ, ನೌಕರರ ವಿವರಗಳನ್ನು ಪಡಿತರ ಚೀಟಿ ದತ್ತಾಂಶಗಳ ಜತೆ ಬೆಸೆಯಬೇಕು' ಎಂದು ಆಡಳಿತ ಸುಧಾರಣಾ ಆಯೋಗ-2 ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಂಟನೇ ವರದಿಯನ್ನು ಗುರುವಾರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಆಯೋಗ ಅಧ್ಯಕ್ಷ ಆರ್‌.ವಿ. ದೇಶಪಾಂಡೆ ಈ ಕುರಿತು ಮಾಹಿತಿ ನೀಡಿದರು.

ಮೂರು ಹೆಕ್ಟೇರ್‌ಗಿಂತ ಹೆಚ್ಚು ಕೃಷಿ ಭೂಮಿ ಹೊಂದಿದ್ದರೆ ಬಿಪಿಎಲ್‌ ಪಡಿತರ ಚೀಟಿ ಪಡೆಯುವಂತೆ ಇಲ್ಲ. ಕೃಷಿ ಭೂಮಿಯ ದತ್ತಾಂಶಗಳನ್ನು ಪಡಿತರ ಚೀಟಿಗಳ ದತ್ತಾಂಶಗಳ ಜತೆ ಸಮೀಕರಿಸಿದರೆ ಕೃಷಿ ಭೂಮಿ ಹೊಂದಿರುವವರ ವಿವರಗಳನ್ನು ಪರಿಶೀಲಿಸಲು ಸುಲಭವಾಗುತ್ತದೆ' ಎಂದು ಹೇಳಿದರು.

ಎಚ್‌ಆರ್‌ಎಂಎಸ್‌ ತಂತ್ರಾಂಶದಿಂದ ಸರ್ಕಾರಿ ನೌಕರರ ಮಾಹಿತಿ, ವಾಹನ ನೋಂದಣಿ ದತ್ತಾಂಶ, ಆಸ್ತಿ ನೋಂದಣಿ ವಿವರಗಳನ್ನು ಆಹಾರ ಇಲಾಖೆಯ ಪಡಿತರ ವ್ಯವಸ್ಥೆಗೆ ಜೋಡಿಸಬೇಕು. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ನಿಗದಿಪಡಿಸಿದ ಮಾನದಂಡ ಮತ್ತು ವಿಧಾನವನ್ನು ಸೂಕ್ತ ಮಾರ್ಪಾಡುಗಳೊಂದಿಗೆ ಪರಿಗಣಿಸಬೇಕು. ಗ್ರಾಮೀಣ, ನಗರ ಪ್ರದೇಶಗಳ ಗ್ರಾಮ ಅಥವಾ ವಾರ್ಡ್‌ ಸಭೆಗಳಲ್ಲೇ ಬಿಪಿಎಲ್‌ ಕುಟುಂಬಗಳನ್ನು ಗುರುತಿಸಿ, ಅಂತಿಮ ಅನುಮೋದನೆ ಪಡೆಯಬೇಕು ಎಂಬ ಶಿಫಾರಸು ಮಾಡಲಾಗಿದೆ ಎಂದರು.

ಆದಾಯ ಪ್ರಮಾಣಪತ್ರ ವಿತರಣೆಗೆ ಏಕರೂಪದ ವಿಧಾನ ಅನುಸರಿಸಬೇಕು. ಒಂದು ಕುಟುಂಬದ ಎಲ್ಲ ಸದಸ್ಯರಿಗೂ ಪ್ರತ್ಯೇಕ ಆದಾಯ ಪ್ರಮಾಣಪತ್ರ ನೀಡ ಬಾರದು ಎಂದು ಹೇಳಿದರು.

ಅನರ್ಹ ಪಟ್ಚಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಈ ತಿಂಗಳಿನಿಂದ ಅನ್ನಭಾಗ್ಯ ಹಾಗೂ ಗೃಹಲಕ್ಷ್ನಿ ಹಣ ಸಿಗುವುದಿಲ್ಲ

]]>
Wed, 28 May 2025 18:24:06 +0530 shivuagrico
June month rain forecast&ಜೂನ್ ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ,ವಿಶ್ವದಲ್ಲೇ ಮೊದಲ ಭಾರಿ ಕರಾರುವಕ್ಕಾದ ಹವಾಮಾನ ಮುನ್ಸೂಚನೆ ವ್ಯವಸ್ಥೆ ಅಭಿವೃದ್ದಿಪಡಿಸಿದ ಭಾರತ https://krushirushi.in/June-month-rain-forecast-2123 https://krushirushi.in/June-month-rain-forecast-2123 June month rain forecast-ಜೂನ್ ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ,ವಿಶ್ವದಲ್ಲೇ ಮೊದಲ ಭಾರಿ ಕರಾರುವಕ್ಕಾದ ಹವಾಮಾನ ಮುನ್ಸೂಚನೆ ವ್ಯವಸ್ಥೆ ಅಭಿವೃದ್ದಿಪಡಿಸಿದ ಭಾರತ

 ದೇಶದ ಹಲವು ಭಾಗಗಳಲ್ಲಿ ಜೂನ್‌ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯಲಿದ್ದು, ಇದು ಗರಿಷ್ಠ ತಾಪಮಾನ ದಾಖಲಾಗುವ ಪ್ರದೇಶಗಳಲ್ಲಿನ ಉಷ್ಣಾಂಶವನ್ನು ತಗ್ಗಿಸಲು ಸಹಕಾರಿಯಾಗಲಿದೆ' ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಂಗಳವಾರ ಹೇಳಿದೆ.
ಮಳೆ ಸುರಿಯಬೇಕು. ಆದರೆ ಈ ವರ್ಷ ಶೇ 108ರಷ್ಟು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣದ ರಾಜ್ಯಗಳು, ಈಶಾನ್ಯ ಮತ್ತು ವಾಯವ್ಯ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇದೆ' ಎಂದು ಹೇಳಿದ್ದಾರೆ.

ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ ಮೋಹಪಾತ್ರ ಅವರು ಮಾಹಿತಿ ನೀಡಿ, 'ಉತ್ತಮ ಮಳೆಯ ನಿರೀಕ್ಷೆ ಇರುವುದರಿಂದ, ದೇಶದ ಉತ್ತರದ ಹಲವು ಭಾಗಗಳಲ್ಲಿ ಜೂನ್‌ನಲ್ಲಿ ದಾಖಲಾಗುತ್ತಿದ್ದ ಗರಿಷ್ಠ ಉಷ್ಣಾಂಶವೂ ತಗ್ಗುವ ಸಾಧ್ಯತೆ ಇದೆ. ದೇಶದ ಮಧ್ಯ ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದೆ' ಎಂದಿದ್ದಾರೆ.

'ಜೂನ್‌ನಿಂದ ಸೆಪ್ಟೆಂಬರ್‌ವರೆಗೂ ಮಳೆಯ ಪ್ರಮಾಣ ಶೇ 106ರಷ್ಟು ಸುರಿಯಲಿದೆ. ಕಳೆದ 50 ವರ್ಷಗಳ ದಾಖಲೆಯ ಪ್ರಕಾರ ಈ ಅವಧಿಯಲ್ಲಿ (87 ಸೆಂ.ಮೀ.) ಶೇ 96ರಿಂದ ಶೇ 104ರಷ್ಟು ಮಳೆ ಸುರಿದಿದೆ. ವಾಯವ್ಯ ಭಾಗದಲ್ಲಿ ಸಾಮಾನ್ಯ ಮಳೆಯಾಗಲಿದೆ. ಈಶಾನ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಕೇಂದ್ರ ಭಾಗ ಹಾಗೂ ದಕ್ಷಿಣದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ' ಎಂದು ಅವರು ತಿಳಿಸಿದ್ದಾರೆ.

'ವಾಡಿಕೆಗಿಂತ ಹೆಚ್ಚು ಮಳೆ ಸುರಿಯುವ ರಾಜ್ಯಗಳಲ್ಲಿ ಮಧ್ಯಪ್ರದೇಶ, ಛತ್ತೀಸಗಢ, ಮಹಾರಾಷ್ಟ್ರ, ಒಡಿಶಾ, ಹಿಮಾಚಲ ಪ್ರದೇಶ, ಬಿಹಾರ, ಜಾರ್ಖಂಡ್‌, ಪಶ್ಚಿಮ ಬಂಗಾಳ ಸೇರಿವೆ. ಪಂಜಾಬ್, ಹರಿಯಾಣ, ಕೇರಳ ಹಾಗೂ ತಮಿಳುನಾಡಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ' ಎಂದು ತಿಳಿಸಿದ್ದಾರೆ.

'2009ರಿಂದ ಈಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ವಾಡಿಕೆಗಿಂತ ಬೇಗ ಮುಂಗಾರು ಕೇರಳ ಪ್ರವೇಶಿಸಿದೆ. ಈ ಬಾರಿ ಮೇ 23ರಂದೇ ಮುಂಗಾರು ಪ್ರವೇಶಿಸಿತು. ಮುಂಬೈಗೆ 16 ದಿನ ಮುಂಚಿತವಾಗಿ ಮುಂಗಾರು ಪ್ರವೇಶಿಸಿದೆ. ಇಂಥ ವಿದ್ಯಮಾನ 1950ರಲ್ಲಿ ಆಗಿತ್ತು' ಎಂದು ಮೋಹಪಾತ್ರ ವಿವರಿಸಿದ್ದಾರೆ.

'2024ರಲ್ಲಿ ಭಾರತವು ಒಟ್ಟು 934.8 ಮಿ.ಮೀ. ಮಳೆಯನ್ನು ಕಂಡಿತ್ತು. ಕಳೆದ ಬಾರಿಗಿಂತ ಈ ವರ್ಷ ಶೇ 108ರಷ್ಟು ಮಳೆಯಾಗುವ ಸಾಧ್ಯತೆಗಳಿವೆ. 2023ರಲ್ಲಿ 820 ಮಿ.ಮೀ. (ಶೇ 94.4ರಷ್ಟು ಸರಾಸರಿ), 2022ರಲ್ಲಿ 925 ಮಿ.ಮೀ, 2021ರಲ್ಲಿ 870 ಮಿ.ಮೀ. ಹಾಗೂ 2020ರಲ್ಲಿ 958 ಮಿ.ಮೀ. ಮಳೆಯಾಗಿದೆ' ಎಂದು ಐಎಂಡಿ ಮಾಹಿತಿ ಹೇಳಿದೆ.

ಭಾರತದ ಕೃಷಿ ವಲಯವನ್ನೂ ಒಳಗೊಂಡು ದೇಶದ ಆರ್ಥಿಕತೆಯು ಮೇಲೆ ಮುಂಗಾರು ಭಾರಿ ಪ್ರಭಾವ ಹೊಂದಿದೆ. ಮಳೆಯಾಶ್ರಿತ ಬೆಳೆಗಳು, ಜಲಾಶಯ, ಕುಡಿಯುವ ನೀರು ಮತ್ತು ಜಲವಿದ್ಯುತ್‌ ಕ್ಷೇತ್ರವು ಮುಂಗಾರನ್ನೇ ಅವಲಂಬಿಸಿವೆ. ಕೃಷಿ ಕ್ಷೇತ್ರವನ್ನು ದೇಶದ 42ರಷ್ಟು ಜನಸಂಖ್ಯೆ ಅವಲಂಬಿಸಿದೆ ಹಾಗೂ ದೇಶದ ಜಿಡಿಪಿಯ ಶೇ 18.2ರಷ್ಟು ಗಾತ್ರವನ್ನು ಇದು ಹೊಂದಿದೆ

BFS-ವಿಶ್ವದಲ್ಲೇ ಮೊದಲ ಭಾರಿ ಕರಾರುವಕ್ಕಾದ ಹವಾಮಾನ ಮುನ್ಸೂಚನೆ ವ್ಯವಸ್ಥೆ ಅಭಿವೃದ್ದಿಪಡಿಸಿದ ಭಾರತ


 ಸಾಕಷ್ಟು ಹವಾಮಾನ ವೈಪರೀತ್ಯಗಳಿಂದ ಸಮಸ್ಯೆಗಳನ್ನು ಎದುರಿಸುತ್ತಿರುವ ಭಾರತ ಇದೀಗ ಸಮರ್ಪಕ ರೀತಿಯಲ್ಲಿ ಹವಾಮಾನ ಮುನ್ಸೂಚನೆ ವ್ಯವಸ್ಥೆಯೊಂದನ್ನು ಅಭಿವೃದ್ಧಿಪಡಿಸಿದೆ. ಪಾರ್ಥಸಾರಥಿ ಮುಖೋಪಾಧ್ಯಾಯ ಸೇರಿದಂತೆ ಸಂಶೋಧಕರ ತಂಡವೊಂದು ಭಾರತ್ ಫೋರ್​​ಕ್ಯಾಸ್ಟಿಂಗ್ ಸಿಸ್ಟಂ (ಬಿಎಫ್​​ಎಸ್) ಅನ್ನು ನಿರ್ಮಿಸಿವೆ.

ವಿಶ್ವದಲ್ಲೇ ಅತ್ಯಂತ ಕರಾರುವಾಕ್ ಹವಾಮಾನ ಮುನ್ಸೂಚನೆ ಮಾದರಿ (precise weather forecasting model) ಎಂದು ಕರೆಯಬಹುದಾದ ಈ ಬಿಎಫ್​​ಎಸ್ ಮಾಡಲ್ ಅನ್ನು ಸರ್ಕಾರ ಅನಾವರಣಗೊಳಿಸಿದೆ.

ಭಾರತ್ ಫೋರ್​​ಕ್ಯಾಸ್ಟಿಂಗ್ ಸಿಸ್ಟಂ ನೀಡುವ ಹವಾಮಾನ ಮುನ್ಸೂಚನೆ ಬಹಳ ಕರಾರುವಾಕ್ ಆಗಿರಲಿದೆ. ಆರ್ಕಾ ಎನ್ನುವ ಹೊಸ ಸೂಪರ್​​ಕಂಪ್ಯೂಟರ್​​ನ ಶಕ್ತಿಯು ಬಿಎಫ್​​ಎಸ್​​ಗೆ ಇದೆ. ಈ ಹಿಂದೆ ಇದ್ದ ಪ್ರತ್ಯುಶ್ ಎನ್ನುವ ಸೂಪರ್ ಕಂಪ್ಯೂಟರ್​ನಲ್ಲಿ ಮುನ್ಸೂಚನೆ ಮಾದರಿಯನ್ನು ಚಲಾಯಿಸಲು 10 ಗಂಟೆ ಬೇಕಾಗುತ್ತಿತ್ತು. ಈಗ ಆರ್ಕಾದಲ್ಲಿ ಡಾಟಾ ಅನಾಲಿಸಿಸ್ ಕೇವಲ ನಾಲ್ಕು ಗಂಟೆಯಲ್ಲಿ ಮುಗಿಯುತ್ತದೆ ಎಂದು ಭೂವಿಜ್ಞಾನ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದರೆಂದು ಟೈಮ್ಸ್ ಆಫ್ ಇಂಡಿಯಾದಲ್ಲಿ ವರದಿಯಾಗಿದೆ.

ಈ ಹಿಂದಿನ ವೆದರ್ ಸಿಸ್ಟಂ 12 ಕಿಮೀ ಗ್ರಿಡ್​​ನಲ್ಲಿ ಕಾರ್ಯಾಚರಿಸುತ್ತಿತ್ತು. ಈಗ ಬಿಎಫ್​​ಎಸ್ ಸಿಸ್ಟಂ 6 ಕಿಮೀ ಗ್ರಿಡ್​ನಲ್ಲಿ ಆಪರೇಟ್ ಮಾಡುತ್ತದೆ. ಪಂಚಾಯಿತಿ ಮಟ್ಟದಲ್ಲಿ ಇದು ಹವಾಮಾನ ಮುನ್ಸೂಚನೆಯನ್ನು ನಿಖರವಾಗಿ ನೀಡಬಲ್ಲುದು ಎಂದು ಹೇಳಲಾಗುತ್ತಿದೆ.

ಅಂದರೆ, ಪ್ರತೀ ಆರು ಚದರ ಕಿಮೀ ವ್ಯಾಪ್ತಿ ಪ್ರದೇಶಕ್ಕೆ ಸೀಮಿತವಾಗಿ ಹವಾಮಾನ ಮುನ್ಸೂಚನೆಯನ್ನು ಬಿಎಫ್​​ಎಸ್ ಪ್ರೆಡಿಕ್ಟ್ ಮಾಡಬಲ್ಲುದು. ದೇಶಾದ್ಯಂತ ಇರುವ 40 ಡಾಪ್ಲರ್ ವೆದರ್ ರಾಡಾರ್​​ಗಳ ನೆಟ್ವರ್ಕ್ ಅನ್ನು ಸಮರ್ಪಕ ರೀತಿಯಲ್ಲಿ ಬಳಸಿಕೊಂಡು ನಿಖರ ಹವಾಮಾನ ಮುನ್ಸೂಚನೆ ನೀಡಲಾಗುತ್ತದೆ.

ನಲವತ್ತು ಇರುವ ಈ ಡಾಪ್ಲರ್ ರಾಡಾರ್​​ಗಳ ಸಂಖ್ಯೆಯನ್ನು ಸದ್ಯದಲ್ಲೇ ನೂರಕ್ಕೆ ಏರಿಸಲಾಗುತ್ತಿದೆ. ಮುಂದಿನ ಎರಡು ಗಂಟೆಯಲ್ಲಿ ಯಾವ್ಯಾವ ಪ್ರದೇಶಗಳಲ್ಲಿ ಏನು ಹವಾಮಾನ ವೈಪರೀತ್ಯ ಸಂಭವಿಸಬಹುದು ಎಂಬ ಕಿರು ಅವಧಿ ಮುನ್ಸೂಚನೆಯನ್ನೂ ಇದು ನೀಡಬಲ್ಲುದು.

ಬ್ರಿಟನ್, ಅಮೆರಿಕ, ಐರೋಪ್ಯ ದೇಶಗಳಲ್ಲಿ ಇರುವ ಫೋರ್​​ಕ್ಯಾಸ್ಟ್ ಮಾಡಲ್​​ಗೊಳಿಗಿಂತ ಬಿಎಫ್​​ಎಸ್ ಹೆಚ್ಚು ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಇದರಿಂದ ಹವಾಮಾನ ವೈಪರೀತ್ಯ ಘಟನೆಯು ಹೆಚ್ಚು ಸ್ಪಷ್ಟವಾಗಿ ಗೋಚರವಾಗಬಹುದು.

ಭಾರತಕ್ಕೆ ಬಹಳ ಮುಖ್ಯ ಈ ಬಿಎಫ್​​ಎಸ್

ಭಾರತವು ಬಹಳಷ್ಟು ವೈಪರೀತ್ಯ ಹವಾಮಾನಗಳಿರುವ ಪ್ರದೇಶಗಳಿಂದ ಕೂಡಿದೆ. ಬರ, ಪ್ರವಾಹ ಪರಿಸ್ಥಿತಿ ಯಾವಾಗ ವಕ್ಕರಿಸುತ್ತದೆ ಎಂದು ಹೇಳುವುದು ಕಷ್ಟ. ರೈತರು ಎಚ್ಚೆತ್ತುಕೊಳ್ಳುವಷ್ಟರಲ್ಲಿ ಬೆಲೆಗಳು ಹಾಳಾಗಿಹೋಗಬಹುದು. ಕಳೆದ ಮೂರ್ನಾಲ್ಕು ವರ್ಷಗಳಿಂದ ಭಾರತದಲ್ಲಿ ಸಾಕಷ್ಟು ಬೆಳೆಗಳು ಬರ ಮತ್ತು ಪ್ರವಾಹಗಳಿಗೆ ಬಲಿಯಾಗಿವೆ.

]]>
Wed, 28 May 2025 06:46:11 +0530 shivuagrico
Bele sala&59.39 ಲಕ್ಷ ರೈತರಿಗೆ ಬೆಳೆಸಾಲ ವಿತರಣೆ, 63.47 ಲಕ್ಷ ರೈತರಿಗೆ ಬಡ್ಡಿ ಸಹಾಯಧನ https://krushirushi.in/Bele-sala-2122 https://krushirushi.in/Bele-sala-2122 Bele sala-59.39 ಲಕ್ಷ ರೈತರಿಗೆ ಬೆಳೆಸಾಲ ವಿತರಣೆ, 63.47 ಲಕ್ಷ ರೈತರಿಗೆ ಬಡ್ಡಿ ಸಹಾಯಧನ

ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್(Survey number) ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.

 ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ(Bele sala) ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.

 ಸಾಲ(crop loan status)ವಿವರ ಚೆಕ್ ಮಾಡುವುದು ಹೇಗೆ?

 ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು 

https://landrecords.karnataka.gov.in/Service2/

 ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ. 

 ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ

  ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ

ನಂತರ view ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ

ಇದನ್ನೂ ಓದಿ

ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427 

 ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.

 ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.

  ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ.  ಎಂಬ ಮಾಹಿತಿ ಇರುತ್ತದೆ.


 ಈ ಮಾಹಿತಿ ರೈತರಿಗೆ ತುಂಬಾ ಅನುಕೂಲವಾಗಿದೆ ಸರ್ವೇ ನಂಬರ್ ನಮೂದಿಸಿದರೆ ಸಾಕು ರೈತರು ದೇಶದ ಯಾವುದೇ ಮೂಲೆಯಿಂದಲೂ ಮಾಹಿತಿ ಪಡೆಯಬಹುದು. ಕೇವಲ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವ ಮಾಹಿತಿ ಎಲ್ಲವೂ ರೈತರಿಗೆ ಸಿಗಲಿದೆ.

Bele sala baddi manna-ಈ ಯೋಜನೆಯಡಿ ಸಿಗಲಿದೆ ನಿಮ್ಮ ಸಾಲದ ಮೇಲೆ 3% ಬಡ್ಡಿ ಮನ್ನಾ,ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

 ಕೇಂದ್ರ ವಲಯದ ಯೋಜನೆ ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಸರ್ಕಾರವು ಹಣಕಾಸು ಸೌಲಭ್ಯಗಳನ್ನು ಒದಗಿಸುತ್ತಿದ್ದು, ರೂ. 2 ಕೋಟಿ ಸಾಲದ ಮೊತ್ತಕ್ಕೆ ವಾರ್ಷಿಕ ಶೇ. 3ರಂತೆ 7 ವರ್ಷದ ಅವಧಿಗೆ ಬಡ್ಡಿ ಸಹಾಯಧನ ಲಭ್ಯವಿರುತ್ತದೆ.


ಅರ್ಹ ಕೃಷಿ ಚಟುವಟಿಕೆಗಳು/ಯೋಜನೆಗಳು ಈ ಕೆಳಗಿನಂತಿವೆ

ಇ-ಮಾರುಕಟ್ಟೆ ವೇದಿಕೆ ಸೇರಿದಂತೆ ಸರಬರಾಜು ಸರಪಳಿ ಸೇವೆಗಳು ಗೋದಾಮುಗಳು ಮತ್ತು ಸೈಲೊಗಳು + ಪ್ಯಾಕ್ ಹೌಸ್‌ಗಳು ವಿಂಗಡಣೆ ಮತ್ತು ಶ್ರೇಣೀಕರಣ ಘಟಕಗಳು ಶೀತಲಗೃಹ ಸರಪಳಿಗಳು ಸಾಗಾಣಿಕೆ ಸೌಲಭ್ಯಗಳು ಪ್ರಾಥಮಿಕ ಸಂಸ್ಕರಣಾ ಕೇಂದ್ರಗಳು ಹಣ್ಣು ಮಾಗಿಸುವ ಘಟಕಗಳು

ಮೌಲ್ಯಮಾಪನ ಘಟಕಗಳು ಸಂಕುಚಿತ ಜೈವಿಕ ಅನಿಲ (CBG) ಸ್ಥಾವರ + ಸಾವಯವ ಪರಿಕರ ಉತ್ಪಾದನೆ + ಜೈವಿಕ ಉತ್ತೇಜಕ ಉತ್ಪಾದನಾ ಘಟಕಗಳು * ಸಸ್ಯ ನರ್ಸರಿ /ಅಂಗಾಂಶ ಕೃಷಿ ಬೀಜ ಸಂಸ್ಕರಣೆ + ಕೃಷಿ ಯಂತ್ರಧಾರೆ ಕೇಂದ್ರಗಳು ಸ್ಮಾರ್ಟ್ ಮತ್ತು ನಿಖರವಾದ ಕೃಷಿ ಸಂಯೋಜಿತ ಸ್ಪಿರುಲಿನಾ ಉತ್ಪಾದನೆ ಮತ್ತು ಸಂಸ್ಕರಣಾ ಘಟಕಗಳು ರೇಷ್ಮೆ ಕೃಷಿ ಸಂಸ್ಕರಣಾ ಘಟಕ • ಜೇನು ಸಂಸ್ಕರಣಾ ಘಟಕ ಪ್ಲಾಂಟ್ ಕ್ಯಾರಂಟೈನ್ ಘಟಕಗಳು ಮತ್ತು ಸಾಮೂಹಿಕ ಕೃಷಿ ಅಡಿ: ಜಲಕೃಷಿ, ವಾಯುಕೃಷಿ, ಹಸಿರುಮನೆ, ಬಹುಮಹಡಿ ಕೃಷಿ, ಅಣಬೆ ಬೇಸಾಯ

ಅರ್ಹ ಫಲಾನುಭವಿಗಳು

ರೈತರು/ ರೈತ ಉತ್ಪಾದಕ ಸಂಸ್ಥೆಗಳು, ಪ್ರಾಂತೀಯ ಸಹಕಾರ ಒಕ್ಕೂಟಗಳು ಕೃಷಿ ಉದ್ಯಮಿಗಳು / ನವೋದ್ಯಮಿಗಳು ಪ್ರಾಥಮಿಕ ಕೃಷಿ ಕ್ರೆಡಿಟ್ ಸಹಕಾರ ಸಂಘಗಳು + ವಿವಿಧೋದ್ದೇಶ ಸಹಕಾರ ಸಂಘಗಳು * ಸ್ವ-ಸಹಾಯ ಗುಂಪುಗಳು / ಜಂಟಿ ಬಾಧ್ಯತಾ ಗುಂಪುಗಳು / ಖಾಸಗಿ ಮಾಲೀಕತ್ವ ಸಂಸ್ಥೆಗಳು.
ಯೋಜನೆಯಲ್ಲಿ ಭಾಗವಹಿಸುವ ಹಣಕಾಸು ಸಂಸ್ಥೆಗಳು:
ರಾಷ್ಟ್ರೀಕೃತ ಬ್ಯಾಂಕುಗಳು + ಶೆಡ್ಯೂಲ್ಡ್ ಸಹಕಾರಿ ಬ್ಯಾಂಕ್ ಗಳು + ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ ಗಳು ಸಣ್ಣ ಹಣಕಾಸು ಬ್ಯಾಂಕುಗಳು + ಬ್ಯಾಂಕೇತರ ಹಣಕಾಸು ಸಂಸ್ಥೆಗಳು + ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (ಎನ್ ಸಿಡಿಸಿ).

ಅರ್ಜಿ ಸಲ್ಲಿಕೆ ಪ್ರಕ್ರಿಯೆ


ಮೊದಲು ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://agriinfra.dac.gov.in/Home/Login

ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ Beneficiary ಮೇಲೆ ಕ್ಲಿಕ್ ಮಾಡಿ
ನಂತರ Benefit under other scheme ಮೇಲೆ ಕ್ಲಿಕ್ ಮಾಡಿ

ನಂತರ ನೀವು ಅರ್ಜಿ ಸಲ್ಲಿಸಲು ಬಯಸುವ ಯೋಜನೆಯ ಮೇಲೆ ಕ್ಲಿಕ್ ಮಾಡಿ
ಉದಾಹರಣೆಗೆ ಈಗಾಗಲೇ ನೀವು PMFME ಯೋಜನೆಯ ಫಲಾನುಭವಿಗಳಾಗಿದ್ದು,ನಿಮ್ಮ ಸಾಲದ ಮೇಲೆ 3% ಬಡ್ಡಿ ಸಬ್ಸಿಡಿ ಪಡೆಯಬಹುದು

ನಂತರ ನಿಮ್ಮ ಹೆಸರು, ಮೊಬೈಲ್ ನಂಬರ್, ಆಧಾರ್ ನಂಬರ್ ಹಾಕಿ Send OTP ಮೇಲೆ ಕ್ಲಿಕ್ ಮಾಡಿ,ಮೊಬೈಲ್ ಗೆ ಬರುವ OTP ಹಾಕಿ Register ಮಾಡಿ

ನಿಮ್ಮ ಮೊಬೈಲ್ ಗೆ ID ಮತ್ತು password ಬರುತ್ತದೆ,ಅದನ್ನು ಹಾಕಿ ಲಾಗಿನ್ ಮಾಡಿ

ನಂತರ setting icon ಮೇಲೆ ಕ್ಲಿಕ್ ಮಾಡಿ Apply for interest subvention under other scheme ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಮಾಹಿತಿ ತುಂಬಿ,ನಿಮ್ಮ ಬ್ಯಾಂಕ್ ನ ಲೋನ್ Saction letter ಹಾಗೂ ಯೋಜನಾ ವರದಿಯನ್ನು ಅಪ್ಲೌಡ್ ಮಾಡಿ,Submit ಮೇಲೆ ಕ್ಲಿಕ್ ಮಾಡಿ


CPMU, ಕೃಷಿ ಮತ್ತು ರೈ ಕಲ್ಯಾಣ ಮಂತ್ರಾಲಯದ ಮೂಲಕ ಪರಿಶೀಲಿಸಲಾದ ಅರ್ಜಿಯನ್ನು ಬ್ಯಾಂಕ್‌ ಶಾಖೆಗೆ ಆನ್‌ ಲೈನ್‌ ನಲ್ಲಿ ವರ್ಗಾಯಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕೃಷಿ/ತೋಟಗಾರಿಕೆ ಇಲಾಖೆ, ಜಿಲ್ಲಾ ನಬಾರ್ಡ್‌ ವ್ಯವಸ್ಥಾಪಕರು, ನಿಮ್ಮ ವ್ಯಾಪ್ತಿಯ ಬ್ಯಾಂಕ್/‌ ಹಣಕಾಸು ಸಂಸ್ಥೆಗಳನ್ನು ಸಂಪರ್ಕಿಸಬಹುದು.

]]>
Tue, 27 May 2025 19:00:56 +0530 shivuagrico
Corona guidelines&ಮತ್ತೆ ಕರೋನಾ ಉಲ್ಬಣ,ಶಾಲಾ ಕಾಲೇಜುಗಳಿಗೆ ರಜೆ,ಲಾಕ್ಡೌನ್ ಸೇರಿದಂತೆ ಸರ್ಕಾರದಿಂದ ಮಹತ್ವದ ಆದೇಶ https://krushirushi.in/Corona-guidelines-2121 https://krushirushi.in/Corona-guidelines-2121 Covid-19 guidelines-ಮತ್ತೆ ಕರೋನಾ ಉಲ್ಬಣ,ಶಾಲಾ ಕಾಲೇಜುಗಳಿಗೆ ರಜೆ,ಲಾಕ್ಡೌನ್ ಸೇರಿದಂತೆ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದಲ್ಲಿ ಮತ್ತೆ ಕೊರೋನಾ ಉಲ್ಬಣಗೊಳ್ಳುವ ಆತಂಕ ಎದುರಾಗಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಹಲವು ಸೂಚನೆಗಳನ್ನು ನೀಡಿದ್ದಾರೆ.

ಕೊರೋನಾ ನಿಯಂತ್ರಣಕ್ಕೆ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳಿ. ಕಳೆದ ಬಾರಿ ಆದಂತೆ ಈ ಬಾರಿ ಸಮಸ್ಯೆ ಆಗಬಾರದು. ಕೋವಿಡ್​ ಸಹಾಯವಾಣಿ​​ ತೆರೆಯಿರಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಮಹತ್ವದ ಸೂಚನೆ ನೀಡಿದರು. ಅಲ್ಲದೇ ಜ್ವರ, ನೆಗಡಿ ಇರುವ ಮಕ್ಕಳಿಗೆ ರಜೆ ನೀಡುವಂತೆ ಶಾಲೆಗಳಿಗೆ ಸೂಚಿಸಿದ್ದಾರೆ. ಪ್ರತಿ ವಾರ ಕೊವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಿಎಂ ನೀಡಿದ ಇತರೆ ಸೂಚನೆಗಳು

  • ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.

  • ಸದ್ಯಕ್ಕೆ ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ.

  • ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.

  • ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.

  • ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.

  • ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.

  • ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರುವಂತೆ ಮುಖ್ಯಮಂತ್ರಿಗಳ ಸೂಚನೆ

  • ಕಳೆದ ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೊ – ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.

  • ಎಸ್‌ಎಆರ್‌ಐ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ.

  • ರಾಜ್ಯದಲ್ಲಿ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

  • ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.

  • ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೋನಾ ಸಹಾಯವಾಣಿ ಪ್ರಾರಂಭಿಸಬೇಕು.

  • ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಬೇಕು.

  • ಕೊರೋನಾ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರಬೇಕು.

  • ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು.

]]>
Tue, 27 May 2025 06:20:50 +0530 shivuagrico
ರೈತರು ಬೀಜ ಗೊಬ್ಬರ ಖರೀದಿಸಬೇಕಾದ ಈ ಕೆಲಸ ಮಾಡಿ,ಇಲ್ಲದಿದ್ದರೆ ಸಿಗುವುದಿಲ್ಲ ಪರಿಹಾರ&Subsidy&rate&seeds&and&Fertliser https://krushirushi.in/Subsidy-rate-seeds-and-Fertliser-2120 https://krushirushi.in/Subsidy-rate-seeds-and-Fertliser-2120 Subsidy rate seeds and Fertliser-ರೈತರು ಬೀಜ ಗೊಬ್ಬರ ಖರೀದಿಸಬೇಕಾದ ಗಮನಿಸಬೇಕಾದ ಅಂಶಗಳು

ಮುಂಗಾರು ಹಂಗಾಮಿಗೆ ರೈತರು ಭೂಮಿಯ ಸಿದ್ಧತೆ ಮಾಡಿ ಕೊಳ್ಳುತ್ತಿದ್ದು, ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಸಮೃದ್ಧಿಯಾಗಿ ಸುರಿದು, ಮುಂಗಾರು ಮಳೆ ಉತ್ತಮವಾಗಿ ಆರಂಭವಾಗಿರುವುದರಿಂದ ರೈತರು ಬಿತ್ತನೆ ಬೀಜ, ಗೊಬ್ಬರ ಖರೀದಿ ಮಾಡಲು ಕೃಷಿ ಇಲಾಖೆ ಸಲಹೆ-ಸೂಚನೆಗಳನ್ನು ನೀಡಿದೆ.

ರೈತರು ರಸಗೊಬ್ಬರವನ್ನು ಖರೀದಿ ಮಾಡುವಾಗ ಯಾವೆಲ್ಲ ಅಂಶಗಳನ್ನು ಪ್ರಮುಖವಾಗಿ ಅನುಸರಿಸಬೇಕು? ಹಾಗೂ ಇದೇ ಮಾದರಿಯಲ್ಲಿ ಬಿತ್ತನೆ ಬೀಜ ಹಾಗೂ ಕೀಟನಾಶಕ ಗಳನ್ನು ಖರೀದಿ ಮಾಡುವಾಗ ಅನುಸರಿಸಬೇಕಾದ ಅಗತ್ಯ ಕ್ರಮಗಳ ಕುರಿತು ಸಹ ಒಂದಿಷ್ಟು ಅಗತ್ಯ ಹಾಗೂ ಬಹುಮುಖ್ಯ ಮಾಹಿತಿಯನ್ನು ಕೃಷಿ ಇಲಾಖೆ ಹಂಚಿಕೊಂಡಿದೆ.

ರೈತರು ಮಾರುಕಟ್ಟೆಯಲ್ಲಿ ಗೊಬ್ಬರ ಖರೀದಿ ಮಾಡುವಾಗ ಗಮನಿಸಬೇಕಾದ ಅಂಶಗಳು

* ರಸಗೊಬ್ಬರವನ್ನು ಯಾವಾಗಲೂ ಅಧಿಕೃತ ಮಾರಾಟಗಾರರಿಂದಲೇ ಖರೀದಿಸಬೇಕು

* ರಸಗೊಬ್ಬರ ಚೀಲದ ಬಾಯಿಯನ್ನು ಯಂತ್ರದಿಂದ ಹೊಲಿದಿರಬೇಕು. ಕೈಯಿಂದ ಚೀಲವನ್ನು ಹೊಲಿದಿದ್ದರೆ ಅದಕ್ಕೆ ಸೀಸದಿಂದ ಮೊಹರನ್ನು ಹಾಕಿರುವುದನ್ನು ಗಮನಿಸ ಬೇಕು

* ರಸಗೊಬ್ಬರದ ಚೀಲವು ಸರಿಯಾದ ತೂಕ ಇರಬೇಕು. ಅನುಮಾನವಿದ್ದಲ್ಲಿ ಚೀಲವನ್ನು ತೂಕ ಮಾಡಿ ಖರೀದಿಸಬೇಕು

* ರಸಗೊಬ್ಬರ ಚೀಲದ ಮೇಲೆ ನಮೂದಿಸಿರುವ ಗರಿಷ್ಟ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆ ನೀಡಬಾರದು

* ರಸಗೊಬ್ಬರ ಚೀಲದ ಮೇಲೆ ರಸಗೊಬ್ಬರದ ಹೆಸರು, ರಸಗೊಬ್ಬರದ ಬ್ರಾಂಡ್, ರಸಗೊಬ್ಬರ ತಯಾರಕರ ಹೆಸರು ಮತ್ತು ವಿಳಾಸ, ರಸಗೊಬ್ಬರದಲ್ಲಿರುವ ಕನಿಷ್ಠ ಶೇಕಡ ಪೋಷಕಾಂಶಗಳ ವಿವರ, ಗರಿಷ್ಟ ಮತ್ತು ನಿವ್ವಳ ತೂಕ (ಪ್ಯಾಕ್ ಮಾಡಿದಾಗ), ಗರಿಷ್ಟ ಮಾರಾಟ ಬೆಲೆ (ತೆರಿಗೆಗಳನ್ನು ಸೇರಿಸಿ), ತಯಾರಿಸಿದ ತಿಂಗಳು ಮತ್ತು ವರ್ಷ, ಮಿಶ್ರಣ, ವಿಶೇಷ ಮಿಶ್ರಣ ರಸಗೊಬ್ಬರಗಳು, ಲಘು ಪೋಷಕಾಂಶಗಳು ಮತ್ತು ಅವುಗಳ ಮಿಶ್ರಣ ಮತ್ತು ಸೂಪರ್ -ಸ್ಪೇಟ್ ಚೀಲಗಳ ಮೇಲೆ ಬ್ಯಾಚ್ ಸಂಖ್ಯೆ ಮತ್ತು ತಯಾರಿಕಾ ಕಂಪೆನಿಯ ಪರವಾನಗಿ ಪತ್ರ ಇರುವುದನ್ನು ಪರಿಶೀಲಿಸಿ ಖರೀದಿಸಬೇಕು.

* ರಸಗೊಬ್ಬರವನ್ನು ಖರೀದಿಸಿದ್ದಕ್ಕೆ ರಶೀದಿ ಪಡೆಯಬೇಕು. ರಶೀದಿಯಲ್ಲಿ ಖರೀದಿಸಿದ ರಸಗೊಬ್ಬರಗಳ ವಿವರಗಳನ್ನು ತುಂಬಿದ್ದು ರೈತರ ಸಹಿ ಮತ್ತು ಮಾರಾಟಗಾರರ ಸಹಿ ಇರಬೇಕು

* ಕೇಂದ್ರ ಸರ್ಕಾರ ನೀಡುವ ಸಹಾಯಧನದ ಮೊತ್ತವನ್ನು (ಅನ್ವಯವಾಗುವ ಕಡೆ) ಕಡ್ಡಾಯವಾಗಿ ನಮೂದಿಸಿರುವುದನ್ನು ಗಮನಿಸಬೇಕು

ಬಿತ್ತನೆ ಬೀಜವನ್ನು ಖರೀದಿಸುವಾಗ ಗಮನಿಸಬೇಕಾದ ಮುಖ್ಯ ಅಂಶಗಳು:

ರೈತರು ಮಾರುಕಟ್ಟೆಯಲ್ಲಿ ಗೊಬ್ಬರ ಖರೀದಿ ಮಾಡುವಾಗ ಗಮನಿಸಬೇಕಾದ ಅಂಶಗಳು

* ರಸಗೊಬ್ಬರವನ್ನು ಯಾವಾಗಲೂ ಅಧಿಕೃತ ಮಾರಾಟಗಾರರಿಂದಲೇ ಖರೀದಿಸಬೇಕು

* ರಸಗೊಬ್ಬರ ಚೀಲದ ಬಾಯಿಯನ್ನುಯಂತ್ರದಿಂದ ಹೊಲಿದಿರಬೇಕು. ಕೈಯಿಂದ ಚೀಲವನ್ನು ಹೊಲಿದಿದ್ದರೆ ಅದಕ್ಕೆ ಸೀಸದಿಂದ ಮೊಹರನ್ನು ಹಾಕಿರುವುದನ್ನು ಗಮನಿಸಬೇಕು

ಕೀಟನಾಶಕ ಖರೀದಿಸುವಾಗ ಗಮನಿಸಬೇಕಾದ ಅಂಶಗಳು:

* ಅಧಿಕೃತ ಬಿತ್ತನೆ ಬೀಜ ಮಾರಾಟಗಾರ ರಿಂದಲೇ ಬಿತ್ತನೆ ಬೀಜವನ್ನು ಖರೀದಿಸಿ

* ಬಿತ್ತನೆ ಬೀಜ ಖರೀದಿಸಿದಾಗ ತಪ್ಪದೇ ಅಧಿಕೃತ ರಶೀದಿ ಪಡೆಯಬೇಕು. ರಶೀದಿಯಲ್ಲಿ ಲಾಟ್‌ನಂಬರ್ ನಮೂದಿಸಿರಬೇಕು

* ಚೀಲದ ಮೇಲೆ ನಮೂದಿಸಿರುವಂತೆ ತೂಕ ಸರಿಯಾಗಿದೆಯೆ ಎಂದು ಖಚಿತಪಡಿಸಿಕೊಂಡು ಖರೀದಿಸಿ

* ಬಿತ್ತನೆ ಬೀಜದ ಉತ್ಪಾದಕರು ಹಾಗೂ ಮಾರಾಟಗಾರರ ವಿಳಾಸವನ್ನು ಗಮನಿಸಬೇಕು

* ಬಿತ್ತನೆ ಬೀಜವು ಸಂಬಂಧಪಟ್ಟ ಪ್ರಾಧಿಕಾರದಿಂದ ಪರೀಕ್ಷಿಸಲ್ಪಟ್ಟು ಗುಣಮಟ್ಟದ ಬಗ್ಗೆ ಧೃಡೀಕರಿಸಲಾಗಿದೆಯೆ? ಧೃಡೀಕರಣದ ಟ್ಯಾಗ್‌ಗಳನ್ನುಲಗತ್ತಿಸಲಾಗಿದೆಯೆ? ಎಂದು ಖಾತರಿಸಿಪಡಿಸಿಕೊಳ್ಳಿ

* ಬಿತ್ತನೆಗೆ ಮುಂಚೆ ಬೀಜ ಮೊಳೆಯುವಿಕೆ ಪ್ರಮಾಣವನ್ನು ಪರೀಕ್ಷಿಸಿಕೊಳ್ಳಬೇಕು

* ಬಿತ್ತನೆ ಬೀಜ, ದೃಢೀಕರಣದ ಬಗ್ಗೆ ಲಗತ್ತಿಸಿರುವ ಟ್ಯಾಗುಗಳನ್ನು ಬೆಳೆ ಕಟಾವು ಆಗುವವರೆಗೆ ಸುರಕ್ಷಿತವಾಗಿ ಕಾಯ್ದಿಟ್ಟುಕೊಳ್ಳಬೇಕು

* ನಮೂದಿಸಿರುವ ಉತ್ಪಾದನಾ ದಿನಾಂಕ ಮತ್ತು ವ್ಯಾಲಿಡಿಟಿ ಅವಧಿಯನ್ನು ಗಮನಿಸಬೇಕು

* ಕೀಟನಾಶಕದ ಉತ್ಪಾದನಾ ದಿನಾಂಕ ಹಾಗೂ ಅವಧಿ ಮೀರುವ ದಿನಾಂಕ, ಕೀಟನಾಶಕದ ಉತ್ಪಾದನಾ ದಿನಾಂಕ ಹಾಗೂ ಅವಧಿ ನಮೂದಿಸಲಾಗಿ ದೆಯೆ ಎಂದು ಗಮನಿಸಬೇಕು

  • ಕೀಟನಾಶಕದ ಗುಣಮಟ್ಟದ ಬಗ್ಗೆ ಅನುಮಾನವಿದ್ದಲ್ಲಿ ಸಮೀಪದ ಕೀಟನಾಶಕ ಪರಿವೀಕ್ಷಕರ ಪ್ರಯೋಗಾಲಯಕ್ಕೆ ಕಳುಹಿಸಿ ಗುಣಮಟ್ಟವನ್ನು ಖಾತ್ರಿ ಪಡಿಸಿಕೊಳ್ಳಬೇಕು

Subsidy seed rate list-ಕೃಷಿ ಇಲಾಖೆಯಲ್ಲಿ ಸಬ್ಸಿಡಿ ದರದಲ್ಲಿ ಸಿಗುವ ಬೀಜಗಳು ಹಾಗೂ ದರಪಟ್ಟಿ

ಸಸ್ಯಗಳ  ಬೆಳವಣೆಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಆಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತದೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು ಕ್ಯಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಬ್ಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಲಘು ಪೋಷಕಾಂಶದ ಕೊರತೆಯಾದರು ಸಸ್ಯಗಳ ಬೆಳವಣೆಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.

ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದಲೇ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಆನಿವಾರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯುವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು, ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರೆವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿರುತ್ತದೆ.
ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ. ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಆಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ.

ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ, ರಂಜಕ, ಪೊಟ್ಯಾಷ್ ರಸಗೊಬ್ಬರಗಳನ್ನು 4:2:1 ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಪ್ರಸ್ತುತ ರೈತರು ಯಥೇಚ್ಛವಾಗಿ ಬಳಸುತ್ತಿರುವ ಈ ರಸಗೊಬ್ಬರಗಳ ಅನುಪಾತವು 5.08:2.89:1 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಿ, ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸರಿದೂಗಿಸಬಹುದಾಗಿರುತ್ತದೆ.

ಅಲ್ಲದೇ, ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಆಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಡಿ.ಎ.ಪಿ. ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26. 22:32:16, 14:35:14, 17:17:17, 14:28:14, 19:19:19, 20:10:10 ಇತ್ಯಾದಿ ಬಳಸಬಹುದಾಗಿದೆ. ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕರು ಸಲಹೆ ನೀಡಿದೆ.

]]>
Mon, 26 May 2025 19:44:18 +0530 shivuagrico
Subsidy seed rate list&ಕೃಷಿ ಇಲಾಖೆಯಲ್ಲಿ ಸಬ್ಸಿಡಿ ದರದಲ್ಲಿ ಸಿಗುವ ಬೀಜಗಳು ಹಾಗೂ ದರಪಟ್ಟಿ https://krushirushi.in/Subsidy-seed-rate-list-2119 https://krushirushi.in/Subsidy-seed-rate-list-2119 Subsidy seed rate list-ಕೃಷಿ ಇಲಾಖೆಯಲ್ಲಿ ಸಬ್ಸಿಡಿ ದರದಲ್ಲಿ ಸಿಗುವ ಬೀಜಗಳು ಹಾಗೂ ದರಪಟ್ಟಿ

ಸಸ್ಯಗಳ  ಬೆಳವಣೆಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಆಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತದೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು ಕ್ಯಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಬ್ಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಲಘು ಪೋಷಕಾಂಶದ ಕೊರತೆಯಾದರು ಸಸ್ಯಗಳ ಬೆಳವಣೆಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.

ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದಲೇ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಆನಿವಾರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯುವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು, ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರೆವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿರುತ್ತದೆ.
ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ. ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಆಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ.

ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ, ರಂಜಕ, ಪೊಟ್ಯಾಷ್ ರಸಗೊಬ್ಬರಗಳನ್ನು 4:2:1 ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಪ್ರಸ್ತುತ ರೈತರು ಯಥೇಚ್ಛವಾಗಿ ಬಳಸುತ್ತಿರುವ ಈ ರಸಗೊಬ್ಬರಗಳ ಅನುಪಾತವು 5.08:2.89:1 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಿ, ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸರಿದೂಗಿಸಬಹುದಾಗಿರುತ್ತದೆ.

ಅಲ್ಲದೇ, ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಆಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಡಿ.ಎ.ಪಿ. ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26. 22:32:16, 14:35:14, 17:17:17, 14:28:14, 19:19:19, 20:10:10 ಇತ್ಯಾದಿ ಬಳಸಬಹುದಾಗಿದೆ. ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕರು ಸಲಹೆ ನೀಡಿದೆ.

]]>
Mon, 26 May 2025 06:29:36 +0530 shivuagrico
20 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ರದ್ದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಫಾರಸ್ಸು&Canceled ration card list https://krushirushi.in/Canceled-ration-card-list-2118 https://krushirushi.in/Canceled-ration-card-list-2118 20 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ರದ್ದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಫಾರಸ್ಸು-Canceled ration card list

“ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.”
ಸಿದ್ದರಾಮಯ್ಯ, ಮುಖ್ಯಮಂತ್ರಿಗಳು

ಕಳೆದ ಜುಲೈ 8ರಂದು ವಿಧಾನಸೌಧದಲ್ಲಿ ರಾಜ್ಯದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸುವಂತೆ ಖಡಕ್ ಸೂಚನೆ ನೀಡಿದ್ದರು.


ರಾಜ್ಯದಲ್ಲಿ ಶೇ 80ರಷ್ಟು (1.27) ಬಿಪಿಎಲ್ ಕುಟುಂಬಗಳಿದ್ದು, 4.37 ಕೋಟಿ ಜನರು ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆಯುತ್ತಿದ್ದಾರೆ. ಹೊಸ ಕಾರ್ಡ್‌ಳಿಗೆ ಸಲ್ಲಿಕೆಯಾದ 2.95 ಲಕ್ಷ ಅರ್ಜಿಗಳು ವಿಲೇವಾರಿಗೆ ಬಾಕಿ ಇದ್ದು, ಅನರ್ಹ ಕಾರ್ಡ್ ರದ್ದುಗೊಳಿಸಿ ಅವುಗಳ ಬದಲಾಗಿ ಬಾಕಿ ಇರುವ ಅರ್ಜಿಗಳನ್ನು ಇತ್ಯರ್ಥ ಮಾಡುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಜಿಲ್ಲಾಧಿಕಾರಿಗಳು ಕಳೆದ ಆರು ತಿಂಗಳಲ್ಲಿ ಒಮ್ಮೆಯೂ ಪಡಿತರ ಪಡೆಯದ ಕುಟುಂಬಗಳನ್ನು ಪತ್ತೆ ಹಚ್ಚುವಂತೆ ಆಹಾರ ಮತು ನಾಗರಿಕ ಪೂರೈಕೆ ಇಲಾಖೆಗೆ ನಿರ್ದೇಶನ ನೀಡಿದ್ದು,20 ಲಕ್ಷಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ.

ಅನರ್ಹರು ಬಿಪಿಎಲ್‌ ಪಡಿತರ ಚೀಟಿ ಪಡೆಯುವುದನ್ನು ತಪ್ಪಿಸಲು ಪಹಣಿ, ವಾಹನ ನೋಂದಣಿ, ನೌಕರರ ವಿವರಗಳನ್ನು ಪಡಿತರ ಚೀಟಿ ದತ್ತಾಂಶಗಳ ಜತೆ ಬೆಸೆಯಬೇಕು' ಎಂದು ಆಡಳಿತ ಸುಧಾರಣಾ ಆಯೋಗ-2 ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಂಟನೇ ವರದಿಯನ್ನು ಗುರುವಾರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಆಯೋಗ ಅಧ್ಯಕ್ಷ ಆರ್‌.ವಿ. ದೇಶಪಾಂಡೆ ಈ ಕುರಿತು ಮಾಹಿತಿ ನೀಡಿದರು.

ಮೂರು ಹೆಕ್ಟೇರ್‌ಗಿಂತ ಹೆಚ್ಚು ಕೃಷಿ ಭೂಮಿ ಹೊಂದಿದ್ದರೆ ಬಿಪಿಎಲ್‌ ಪಡಿತರ ಚೀಟಿ ಪಡೆಯುವಂತೆ ಇಲ್ಲ. ಕೃಷಿ ಭೂಮಿಯ ದತ್ತಾಂಶಗಳನ್ನು ಪಡಿತರ ಚೀಟಿಗಳ ದತ್ತಾಂಶಗಳ ಜತೆ ಸಮೀಕರಿಸಿದರೆ ಕೃಷಿ ಭೂಮಿ ಹೊಂದಿರುವವರ ವಿವರಗಳನ್ನು ಪರಿಶೀಲಿಸಲು ಸುಲಭವಾಗುತ್ತದೆ' ಎಂದು ಹೇಳಿದರು.

ಎಚ್‌ಆರ್‌ಎಂಎಸ್‌ ತಂತ್ರಾಂಶದಿಂದ ಸರ್ಕಾರಿ ನೌಕರರ ಮಾಹಿತಿ, ವಾಹನ ನೋಂದಣಿ ದತ್ತಾಂಶ, ಆಸ್ತಿ ನೋಂದಣಿ ವಿವರಗಳನ್ನು ಆಹಾರ ಇಲಾಖೆಯ ಪಡಿತರ ವ್ಯವಸ್ಥೆಗೆ ಜೋಡಿಸಬೇಕು. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ನಿಗದಿಪಡಿಸಿದ ಮಾನದಂಡ ಮತ್ತು ವಿಧಾನವನ್ನು ಸೂಕ್ತ ಮಾರ್ಪಾಡುಗಳೊಂದಿಗೆ ಪರಿಗಣಿಸಬೇಕು. ಗ್ರಾಮೀಣ, ನಗರ ಪ್ರದೇಶಗಳ ಗ್ರಾಮ ಅಥವಾ ವಾರ್ಡ್‌ ಸಭೆಗಳಲ್ಲೇ ಬಿಪಿಎಲ್‌ ಕುಟುಂಬಗಳನ್ನು ಗುರುತಿಸಿ, ಅಂತಿಮ ಅನುಮೋದನೆ ಪಡೆಯಬೇಕು ಎಂಬ ಶಿಫಾರಸು ಮಾಡಲಾಗಿದೆ ಎಂದರು.

ಆದಾಯ ಪ್ರಮಾಣಪತ್ರ ವಿತರಣೆಗೆ ಏಕರೂಪದ ವಿಧಾನ ಅನುಸರಿಸಬೇಕು. ಒಂದು ಕುಟುಂಬದ ಎಲ್ಲ ಸದಸ್ಯರಿಗೂ ಪ್ರತ್ಯೇಕ ಆದಾಯ ಪ್ರಮಾಣಪತ್ರ ನೀಡ ಬಾರದು ಎಂದು ಹೇಳಿದರು.

ಅನರ್ಹ ಪಟ್ಚಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಈ ತಿಂಗಳಿನಿಂದ ಅನ್ನಭಾಗ್ಯ ಹಾಗೂ ಗೃಹಲಕ್ಷ್ನಿ ಹಣ ಸಿಗುವುದಿಲ್ಲ

]]>
Sun, 25 May 2025 20:52:20 +0530 shivuagrico
CET result 2025&ಸಿಇಟಿ ಫಲಿತಾಂಶ 2025 ಪ್ರಕಟ,ನಿಮ್ಮ ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್ https://krushirushi.in/CET-result-2025 https://krushirushi.in/CET-result-2025 CET result 2025-ಸಿಇಟಿ ಫಲಿತಾಂಶ 2025 ಪ್ರಕಟ,ನಿಮ್ಮ ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಅವರು ಫಲಿತಾಂಶ ಪ್ರಕಟಿಸಿದ್ದಾರೆ.

ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ  (cetonline.Karnataka.gov.in ugcetrank2025/ checkresult.aspx ಹಾಗೂ www.karresults.nic.in   ಫಲಿತಾಂಶದ ವಿವರಗಳು ಲಭ್ಯವಾಗಲಿವೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.

CETresult

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://cetonline.karnataka.gov.in/kea/

ನಂತರ 24-25 UCET ಫಲಿತಾಂಶಗಳ ಲಿಂಕ್1 24/05/2025 ಮೇಲೆ ಕ್ಲಿಕ್ ಮಾಡಿ

ನಂತರ candidate application number,Date of birth ಹಾಕಿ Submit ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಫಲಿತಾಂಶ ಸಿಗಲಿದೆ.

]]>
Sun, 25 May 2025 10:23:04 +0530 shivuagrico
Horticulture department subsidy schemes&ತೋಟಗಾರಿಕೆ ಇಲಾಖೆಯಿಂದ 50% ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ https://krushirushi.in/Horticulture-department-subsidy-schemes-2116 https://krushirushi.in/Horticulture-department-subsidy-schemes-2116 Horticulture department subsidy schemes-ತೋಟಗಾರಿಕೆ ಇಲಾಖೆಯಿಂದ 50% ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ


ರೈತರ ಆದಾಯವನ್ನು ಹೆಚ್ಚಿಸಲು ಮತ್ತು ತೋಟಗಾರಿಕಾ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಸರ್ಕಾರವು ರಾಷ್ಟ್ರೀಯ ತೋಟಗಾರಿಕೆ ಮಂಡಳಿ (NHB) ಮೂಲಕ ಹಲವಾರು ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ರೈತರು ಶೇಡ್‌ ನೆಟ್(Shade net), ಹಸಿರು ಮನೆ(green house), ಪಾಲಿಹೌಸ್ ಕೃಷಿ(Poly house), ಶೀತಲೀಕರಣ ಘಟಕ(cold storage) ಮತ್ತು ಅಣಬೆ ಕೃಷಿ(Mushroom cultivation)ಸ್ಥಾಪನೆಗೆ ಶೇಕಡಾ 50 ರವರೆಗೆ ಸಬ್ಸಿಡಿ ಪಡೆಯಬಹುದು.

ಯಾವೆಲ್ಲಾ ಸೌಲಭ್ಯಗಳು ಲಭ್ಯವಿದೆ‌ ?

ಶೇಡ್‌ ನೆಟ್(Shade net), ಹಸಿರು ಮನೆ(Green House) ಮತ್ತು ಪಾಲಿಹೌಸ್ ಕೃಷಿ(Poly House): ಈ ರೀತಿಯ ಕೃಷಿಗೆ ಸರ್ಕಾರವು ಶೇಕಡಾ 50 ರವರೆಗೆ ಸಬ್ಸಿಡಿ ನೀಡುತ್ತಿದೆ.
ತೆರೆದ ಜಮೀನಿನಲ್ಲಿ ಹಣ್ಣಿನ ಕೃಷಿ: ನೆಲ್ಲಿಕಾಯಿ, ಮಾವು, ಪೇರಲದಂತಹ ಹಣ್ಣುಗಳನ್ನು ಬೆಳೆಯುವ ರೈತರಿಗೆ ಶೇಕಡಾ 40 ರವರೆಗೆ ಸಬ್ಸಿಡಿ ನೀಡಲಾಗುತ್ತಿದೆ.


ಶೀತಲೀಕರಣ ಘಟಕ ಮತ್ತು ಅಣಬೆ ಕೃಷಿ: ಶೀತಲೀಕರಣ ಘಟಕ ಸ್ಥಾಪನೆಗೆ ಶೇಕಡಾ 30 ರಿಂದ 50 ರವರೆಗೆ ಮತ್ತು ಅಣಬೆ ಕೃಷಿಗೆ ಶೇಕಡಾ 40 ರವರೆಗೆ ಸಬ್ಸಿಡಿ ನೀಡಲಾಗುತ್ತಿದೆ.
ಕೃಷಿ ಸಂಬಂಧಿತ ಉದ್ಯಮಿಗಳು, ಸ್ಟಾರ್ಟ್‌ಅಪ್‌ಗಳು ಮತ್ತು ರೈತರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ.
ಹಣ್ಣು ಮತ್ತು ಹೂವುಗಳ ಕೃಷಿಯ ಜೊತೆಗೆ ಸಂಬಾರ ಪದಾರ್ಥಗಳು, ಆರೊಮ್ಯಾಟಿಕ್ ಮತ್ತು ಔಷಧೀಯ ಸಸ್ಯಗಳ ಕೃಷಿಗೂ ಸಬ್ಸಿಡಿ ನೀಡಲಾಗುತ್ತಿದೆ.


ಅರ್ಜಿ ಸಲ್ಲಿಸುವುದು ಹೇಗೆ ?

ರೈತರು ರಾಷ್ಟ್ರೀಯ ತೋಟಗಾರಿಕೆ ಮಂಡಳಿಯ ಅಧಿಕೃತ ವೆಬ್‌ಸೈಟ್ www.nhb.gov.in  ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಯೋಜನೆಯ ವೆಚ್ಚಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.


ಬೇಕಾಗುವ ದಾಖಲೆಗಳು

ಪ್ಯಾನ್ ಕಾರ್ಡ್
ಮತದಾರರ ಗುರುತಿನ ಚೀಟಿ
ಆಧಾರ್ ಕಾರ್ಡ್
ಪಾಲುದಾರಿಕೆ ಸಂಸ್ಥೆಯ ನೋಂದಣಿ (ಅನ್ವಯಿಸಿದರೆ)
ಕಂಪನಿ, ಸೊಸೈಟಿ, ಟ್ರಸ್ಟ್ ಇತ್ಯಾದಿಗಳ ನೋಂದಣಿ (ಅನ್ವಯಿಸಿದರೆ)


ಹೆಚ್ಚಿನ ಮಾಹಿತಿ:

ಹೆಚ್ಚಿನ ಮಾಹಿತಿಗಾಗಿ, ನಿಮ್ಮ ಹತ್ತಿರದ ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಿ.
ಅಥವಾ, ರಾಷ್ಟ್ರೀಯ ತೋಟಗಾರಿಕೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ಈ ಯೋಜನೆಯು ರೈತರಿಗೆ ತೋಟಗಾರಿಕೆ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಮತ್ತು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ.

ಟ್ರ್ಯಾಕ್ಟರ್ ಸೇರಿದಂತೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Tractor subsidy scheme 2025

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಕೃಷಿಹೊಂಡ, ಪ್ಯಾಕ್‌ಹೌಸ್, ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್‌ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


 ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾ‌ರ್ ಕಾರ್ಡ್ ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ

https://horticulturedir.karnataka.gov.in/info-2/Facilities+available+to+farmers/kn

ವಿವಿಧ ಯೋಜನೆಗಳು:

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ:

ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೆÇೀಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:
ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಯಾಕ್‍ಹೌಸ್ ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ:
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.75 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ:

ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಮತ್ತು ಬೈಯೋಡೈಜಿಸ್ಟರ್ ಮತ್ತು ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಸಹ ಅರ್ಜಿ ಆಹ್ವಾನಿಸಲಾಗಿದೆ.

ಮೇಲ್ಕಂಡ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಲಾಗಿದೆ. ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.

]]>
Sat, 24 May 2025 22:51:54 +0530 shivuagrico
Mansoon rains&ಮುಂದಿನ 24 ಗಂಟೆಯೊಳಗೆ ಮುಂಗಾರು ಪ್ರವೇಶ,ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೊಷಣೆ https://krushirushi.in/Manaoon-rains-2115 https://krushirushi.in/Manaoon-rains-2115 Mansoon rains-ಮುಂದಿನ 24 ಗಂಟೆಯೊಳಗೆ ಮುಂಗಾರು ಪ್ರವೇಶ,ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೊಷಣೆ

ಮಾಮೂಲಿಗಿಂತ ಮೊದಲೇ ಈ ಬಾರಿ ಮುಂಗಾರು ಪ್ರವೇಶ ಆಗಲಿದೆ. ಮುಂದಿನ 24 ಗಂಟೆಯೊಳಗೆ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಳೆದ 16 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಕೇರಳದಲ್ಲಿ ಅವಧಿಗಿಂತ ಮೊದಲೇ ಮಾನ್ಸೂನ್‌ ಪ್ರವೇಶಿಸಲಿದೆ.

ಮಾನ್ಸೂನ್ ಆರಂಭಕ್ಕೆ ಎಲ್ಲಾ ಅನುಕೂಲಕರ ಪರಿಸ್ಥಿತಿಗಳು ರಾಜ್ಯದಲ್ಲಿ ಅಭಿವೃದ್ಧಿಗೊಂಡಿದ್ದು, ಕಳೆದ ಎರಡು ದಿನಗಳಿಂದ ಕಡಿಮೆ ಒತ್ತಡದ ಪ್ರದೇಶ ಮತ್ತು ಮುಂದುವರಿಯುತ್ತಿರುವ ಮಾನ್ಸೂನ್ ವ್ಯವಸ್ಥೆಯ ಸಂಯೋಜನೆಯಿಂದಾಗಿ ಕೇರಳದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದೆ.

2001 ಮತ್ತು 2009ರಲ್ಲಿ ಮೇ ಅಂತ್ಯದೊಳಗೆ ಕೇರಳಕ್ಕೆ ಮುಂಗಾರು ಪ್ರವೇಶವಾಗಿತ್ತು. ಆಗ ಮೇ 23ರಂದು ಮುಂಗಾರು ಮಳೆ ಆರಂಭವಾಗಿತ್ತು.

ಸಾಮಾನ್ಯವಾಗಿ ಜೂನ್‌ 1ರಂದು ಕೇರಳಕ್ಕೆ ಮಾನ್ಸೂನ್‌ ಆಗಮನವಾಗುತ್ತದೆ. 1918ರಲ್ಲಿ ಅಂದರೆ ಶತಮಾನಕ್ಕೆ ಮೊದಲೊಮ್ಮೆ ಮೇ 11ರಂದೇ ಮುಂಗಾರು ಪ್ರವೇಶವಾಗಿತ್ತು. ಮತ್ತೊಂದೆಡೆ, ತಡವಾಗಿ ಆರಂಭವಾದ ಮಳೆಯ ದಾಖಲೆ 1972 ರಲ್ಲಿತ್ತು, ಆಗ ಜೂನ್ 18 ರ ಹೊತ್ತಿಗೆ ಮಾನ್ಸೂನ್ ಮಳೆ ಪ್ರಾರಂಭವಾಗಿತ್ತು.

ಕಳೆದ 25 ವರ್ಷಗಳಲ್ಲಿ ಅತ್ಯಂತ ತಡವಾಗಿ ಆರಂಭವಾದ ಮುಂಗಾರು ಎಂದರೆ ಅದು 2016ರಲ್ಲಿ. ಆಗ ಜೂನ್‌ 9ರಂದು ಮುಂಗಾರು ಮಳೆ ಶುರುವಾಗಿತ್ತು.

ದಕ್ಷಿಣ ರಾಜ್ಯಗಳಲ್ಲಿ, ಭಾರತ ಹವಾಮಾನ ಇಲಾಖೆ (ಐಎಂಡಿ) ಶನಿವಾರ (ಮೇ 24) ಕೇರಳ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು, ಕೊಂಕಣ ಮತ್ತು ಗೋವಾದಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.

ರಳಕ್ಕೆ ಇಂದು ಮುಂಗಾರು ಪ್ರವೇಶವಾಗಿದೆ. ಇದರ ನಡುವೆ ಕರ್ನಾಟಕ ಮತ್ತು ಕೇರಳ ಸೇರಿದಂತೆ ಹಲವಾರು ದಕ್ಷಿಣ ಮತ್ತು ಪಶ್ಚಿಮ ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆಯು ಭಾರೀ ಮಳೆಯ ಎಚ್ಚರಿಕೆ ನೀಡಿದೆ.

ರಳಕ್ಕೆ ಇಂದು ಮುಂಗಾರು ಪ್ರವೇಶವಾಗಿದೆ. ಇದರ ನಡುವೆ ಕರ್ನಾಟಕ ಮತ್ತು ಕೇರಳ ಸೇರಿದಂತೆ ಹಲವಾರು ದಕ್ಷಿಣ ಮತ್ತು ಪಶ್ಚಿಮ ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆಯು ಭಾರೀ ಮಳೆಯ ಎಚ್ಚರಿಕೆ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಹೆಚ್ಚಾಗಿದೆ. ಮಲೆನಾಡು ರಾಜ್ಯಗಳಲ್ಲೂ ಗುಡುಗು, ಮಿಂಚು ಸಹಿತ ಮಳೆಯಾಗಿದೆ.

ಮುಂಬೈನಲ್ಲಿ ಮೇ 25ರಿಂದ 27ರವರೆಗೆ 3 ದಿನಗಳವರೆಗೆ ಭಾರೀ ಮಳೆಯಾಗಲಿದೆ.

ನೈಋತ್ಯ ಮಾನ್ಸೂನ್ ಇಂದು ಅಧಿಕೃತವಾಗಿ ಕೇರಳಕ್ಕೆ ಆಗಮಿಸಿದ್ದು, ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಆಲಪ್ಪುಳ, ತ್ರಿಶೂರ್, ಇಡುಕ್ಕಿ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.

ಕರ್ನಾಟಕದ ಕರಾವಳಿಯಲ್ಲಿ ರೆಡ್ ಅಲರ್ಟ್‌;
ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶದಿಂದಾಗಿ ಕರ್ನಾಟಕದಾದ್ಯಂತ ಅದರಲ್ಲೂ ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಐಎಂಡಿ (ಹವಾಮಾನ ಇಲಾಖೆ) ನೀಡಿದೆ. ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಮೇ 27ರವರೆಗೆ ಬಿರುಗಾಳಿ ಸಹಿತ ಅತ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕೊಂಚ ನಿಯಂತ್ರಣಕ್ಕೆ ಬರಲಿದೆ.

ಬೆಳಗಾವಿ ಮತ್ತು ಧಾರವಾಡದಲ್ಲಿ ಕೂಡ ಅಲರ್ಟ್ ಘೋಷಿಸಿದ್ದು, ಬಳ್ಳಾರಿ, ಬೆಂಗಳೂರು (ಗ್ರಾಮೀಣ ಮತ್ತು ನಗರ), ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು ಮತ್ತು ಇತರ ಒಳನಾಡಿನ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗುವ ಮುನ್ಸೂಚನೆ ಇದೆ. ಮೇ 25ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ.ಹವಾಮಾನ ಇಲಾಖೆಯ ಮುನ್ಸೂಚನೆಯ ಅವಧಿಯಲ್ಲಿ ಮಳೆಯೊಂದಿಗೆ ಬಿರುಗಾಳಿ ಬೀಸಲಿದ್ದು, ಹಲವಾರು ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದೆ.

]]>
Sat, 24 May 2025 20:39:26 +0530 shivuagrico
Bele parihara&2.8 ಲಕ್ಷ ರೈತರ ಖಾತೆಗೆ 223 ಕೋಟಿ ಬೆಳೆಹಾನಿ ಪರಿಹಾರ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Bele-parihara-2114 https://krushirushi.in/Bele-parihara-2114 Input subsidy for croploss-ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.


ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್‌ ಸಬ್ಸಿಡಿ ರೈತರ ಬ್ಯಾಂಕ್‌ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Sat, 24 May 2025 14:45:33 +0530 shivuagrico
Pmkisan eligibility&ಪಿಎಂ ಕಿಸಾನ್ ಅರ್ಹತೆಗೆ ಮೇ 31 ಕೊನೆಯ ದಿನಾಂಕ, ಪಿಎಂ ಕಿಸಾನ್ 20ನೇ ಕಂತಿಗೆ ನಿಮ್ಮ ಅರ್ಹತೆ ಚೆಕ್ ಮಾಡಿ https://krushirushi.in/Pmkisan-eligibility-2113 https://krushirushi.in/Pmkisan-eligibility-2113 Pmkisan-ಪಿಎಂ ಕಿಸಾನ್ ಅರ್ಹತೆಗೆ ಮೇ 31 ಕೊನೆಯ ದಿನಾಂಕ, ಪಿಎಂ ಕಿಸಾನ್ 20ನೇ ಕಂತಿಗೆ ನಿಮ್ಮ ಅರ್ಹತೆ ಚೆಕ್ ಮಾಡಿ


PM Kisan Samman Nidhi Yojana: ರೈತರಿಗೆ ಕೃಷಿಗೆ ಸಹಾಯವಾಗಲು ಸರ್ಕಾರ ಪಿಎಂ ಕಿಸಾನ್ ಯೋಜನೆಯನ್ನು 2019ರಲ್ಲಿ ಆರಂಭಿಸಿದೆ. ವರ್ಷಕ್ಕೆ ಮೂರು ಬಾರಿ ರೈತರಿಗೆ 2,000 ರೂ ಹಣವನ್ನು ಸರ್ಕಾರ ನೀಡುತ್ತದೆ. ಇಲ್ಲಿಯವರೆಗೆ 19 ಕಂತುಗಳನ್ನು ಬಿಡುಗಡೆ ಮಾಡಲಾಗಿದೆ. ಸುಮಾರು 10 ಕೋಟಿಯಷ್ಟು ಫಲಾನುಭವಿ ರೈತರಿದ್ದಾರೆ. ಯೋಜನೆಗೆ ಅರ್ಹರಾಗಿರುವ ಯಾವ ರೈತರನ್ನೂ ಕೈಬಿಡದಂತೆ ಸರ್ಕಾರ ಮೇ 31ರವರೆಗೂ ಅಭಿಯಾನ ನಡೆಸಿದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು (PM Kisan Samman Nidhi Yojana) ಎಲ್ಲಾ ಅರ್ಹ ರೈತರಿಗೂ (farmer) ತಲುಪಿಸಲು ಸರ್ಕಾರ ರಾಷ್ಟ್ರವ್ಯಾಪಿ ಅಭಿಯಾನ ಹಮ್ಮಿಕೊಂಡಿದೆ. ಯೋಜನೆಗೆ ಅರ್ಹರಿರುವ ಯಾವ ವ್ಯಕ್ತಿಯೂ ಹೊರಗುಳಿಯಬಾರದು ಎಂಬುದು ಸರ್ಕಾರದ ಗುರಿ. ಈ ಸ್ಯಾಚುರೇಶನ್ ಡ್ರೈವ್ ಮೇ 1ರಂದು ಆರಂಭವಾಗಿದ್ದು, ಮೇ 31ರವರೆಗೆ ಇರಲಿದೆ.

2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ 11 ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ. ರೈತರ ವ್ಯವಸಾಯಕ್ಕೆ ನೆರವಾಗಲು ಸರ್ಕಾರ ಈ ಸ್ಕೀಮ್ ಆರಂಭಿಸಿದೆ. ವರ್ಷಕ್ಕೆ 6,000 ರೂ ಹಣವನ್ನು ರೈತರಿಗೆ ನೀಡಲಾಗುತ್ತದೆ. ವರ್ಷಕ್ಕೆ ಮೂರು ಬಾರಿ, ಅಂದರೆ, ನಾಲ್ಕು ತಿಂಗಳಿಗೊಮ್ಮೆ ತಲಾ 2,000 ರೂ ಹಣವನ್ನು ನೇರವಾಗಿ ರೈತರ ಖಾತೆಗಳಿಗೆ ಹಣ ಹಾಕಲಾಗುತ್ತದೆ.

ಇಲ್ಲಿಯವರೆಗೆ 19 ಕಂತುಗಳನ್ನು ಸರ್ಕಾರ ನೀಡಿದೆ. ಫೆಬ್ರುವರಿ 24ರಂದು 9.8 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ 19ನೇ ಕಂತಿನ ಹಣ ಬಿಡುಗಡೆ ಮಾಡಲಾಗಿತ್ತು. ಈ 9.8 ಕೋಟಿ ರೈತರಲ್ಲಿ 2.41 ಕೋಟಿ ಮಹಿಳೆಯರೇ ಇದ್ದಾರೆ.

Pmkisan eligibility-ತುಂಡು ಕೃಷಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರಿಗೂ ಪಿಎಂ ಕಿಸಾನ್ ಹಣ-ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್


ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ(Pradan mantri kisan samman yojane) 
ಅಡಿ ಅರ್ಹ ಎಲ್ಲ ರೈತರಿಗೆ ಸೌಲಭ್ಯ ನೀಡಲು ಕೇಂದ್ರ ಸರ್ಕಾರ ಸಿದ್ದವಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಹೇಳಿದರು.


ಲೋಕಸಭೆಯಲ್ಲಿ ಮಂಗಳವಾರ ಪ್ರಶೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಭೂ ರಹಿತರಿಗೆ ಈ ಸೌಲಭ್ಯ ನೀಡುವುದಿಲ್ಲ. ಆದರೆ, ತುಂಡು ಕೃಷಿ ಭೂಮಿಯನ್ನಾದರೂ ಹೊಂದಿರಬೇಕು ಎಂದು ವಿವರಿಸಿದರು. 


'ಈ ಯೋಜನೆಯಡಿ ಕೇಂದ್ರ ಸರ್ಕಾರವು ಈವರೆಗೆ 19 ಕಂತುಗಳಲ್ಲಿ ₹3.68 ಲಕ್ಷ ಕೋಟಿ ಮೊತ್ತವನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದೆ' ಎಂದರು. 


ಯೋಜನೆಯ ಭಾಗವಾಗಿಲ್ಲದ ಎಲ್ಲ ಅರ್ಹ ರೈತರಿಗೆ ವಾರ್ಷಿಕ ₹6,000 ನಗದು ಪ್ರಯೋಜನ ನೀಡಲು ಸರ್ಕಾರ ಸಿದ್ಧವಾಗಿದೆ. ಅಂತಹ ರೈತರಿಗೆ ಹಿಂದಿನ ಕಂತುಗಳನ್ನು ನೀಡಲು ಸಿದ್ಧರಿದ್ದೇವೆ. ಅಂತಹ ರೈತರನ್ನು ಗುರುತಿಸಿ ಯೋಜನೆಯಲ್ಲಿ ಸೇರಿಸಲು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಅವರು ಕೋರಿದರು.

ಪಿಎಂ ಕಿಸಾನ್(kisan samman) ಅರ್ಹತೆಯ ಮಾನದಂಡಗಳೇನು?
ಎಲ್ಲ ಅರ್ಹ ಫಲಾನುಭವಿಗಳು ಕನಿಷ್ಠ ಪ್ರಮಾಣದ ಭೂಮಿ ಹೊಂದಿರಬೇಕು. ಇ-ಕೆವೈಸಿ ಮಾಡಿಸಿಕೊಳ್ಳಬೇಕು ಮತ್ತು ಪಿಎಂ-ಕಿಸಾನ್ ಪೋರ್ಟಲ್‌ನಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು. 
ನಿಧಿಯನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಗಾಯಿಸಲಾಗುತ್ತದೆ ಎಂದು ಅವರು ಹೇಳಿದರು.

ಇಲ್ಲಿಯವರೆಗೂ 19 ಕಂತುಗಳಲ್ಲಿ 3.68 ಲಕ್ಷ ಕೋಟಿ ಪಿಎಂ ಕಿಸಾನ್ ಹಣ ರೈತರ ಖಾತೆಗೆ


ಇದುವರೆಗೆ 3.68 ಲಕ್ಷ ಕೋಟಿ ರೂಪಾಯಿಗಳನ್ನು 19 ಕಂತುಗಳಲ್ಲಿ ದೇಶದಾದ್ಯಂತದ ರೈತರಿಗೆ ವಿತರಿಸಲಾಗಿದೆ

ನಿಮಗೇಷ್ಟು ಜಮಾ ಹೀಗೆ ಚೆಕ್ ಮಾಡಿ-Pmkisan beneficiary status 

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/

ಮೊದಲು know your status ಮೇಲೆ ಕ್ಲಿಕ್ ಮಾಡಿ

ನಂತರ know your register number ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ

ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.

ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ

ನಂತರ update your details ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ

 Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.

ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ

Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.

FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ  ಕಾರಣ ಮತ್ತು ಪರಿಹಾರ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

fruitspmk.gov.in ಪೋರ್ಟಲ್ ನಲ್ಲಿ

1

ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ

ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು                                                                     ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು

ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ  (NIC)                     ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ.            ಆ) ಸಮಸ್ಯಾತ್ಮಕ  ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ.

2

ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು

ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ

ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ    ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ

3

ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು

 ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ

ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ   ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ

4

ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ

ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ

OPERATOR ಲಾಗಿನ್ (RSK, ADA office, JDA office)  OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು

5

01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ

ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ

ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ)

6

Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು

ಜಿಲ್ಲೆಗಳಲ್ಲಿ  OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ

AAO ಲಾಗಿನ್  (RSK, ADA office, JDA office)  AAO ಲಾಗಿನ್ನಲ್ಲಿ  ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ,  ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

7

ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ

ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ)

AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.

8

PFMS rejected

Aadhaar Number is not seeded in NPCI

ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ

Bank Name And IFSC Code are not related to each other

ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ

Bank Name is not as per PFMS Bank Master.

Beneficiary is rejected as Account Type is other than SB / SBA / JD

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ)

Duplicate Beneficiary Name , Bank Account No and Bank Name not allowed for same scheme

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

IFSC Code  either not present or currently inactive in tbl BankBranch

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

Incorrect Aadhaar Number

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

One or more mandatory tags values are missing.

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

Rejected by Bank, Account No does not exist in Bank/INVALID/CLOSED

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

9

Amount credited to Account Number-NA

Aadhaar number based payment by GoI

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ.

10

PAYMENT STOPPED BY STATE

 XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳಿದ್ದರೆ ಕೇಂದ್ರ ಕಚೇರಿ ಮಾಹಿತಿ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

11

Transaction failed

ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ.

12

ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ

OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳ   ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

13

ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು

ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ.

ಕೇಂದ್ರ ಸರ್ಕಾರ ದ   pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ.

]]>
Fri, 23 May 2025 22:13:05 +0530 shivuagrico
Agriculture university seeds&ಕೃಷಿ ವಿಶ್ವವಿದ್ಯಾಲಯದಲ್ಲಿ ದೊರೆಯುವ ಬೀಜಗಳ ಪಟ್ಟಿ https://krushirushi.in/Agriculture-university-seeds https://krushirushi.in/Agriculture-university-seeds

Agriculture university seeds-ಕೃಷಿ ವಿಶ್ವವಿದ್ಯಾಲಯದಲ್ಲಿ ದೊರೆಯುವ ಬೀಜಗಳ ಪಟ್ಟಿ

ಗುಣಮಟ್ಟದ ತೊಗರಿ, ಸೋಯಾ, ನವಣೆ, ಕಡಲೆ ಬೀಜ ಖರೀದಿಸಲು ಕಲಬುರಗಿ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳ ರೈತರು ತಂಡಗಳಲ್ಲಿ ಬಂದು ಬೀಜ ಖರೀದಿಸಲು ಆರಂಭಿಸಿದ್ದಾರೆ.

ವಿಶ್ವವಿದ್ಯಾಲಯವೇ 170 ನೋಂದಾಯಿತ ರೈತರ ಹೊಲಗಳಲ್ಲಿ ಪ್ರಮಾಣಿತ ಬೀಜಗಳ ಉತ್ಪಾದನೆ ಮಾಡಿ ರೈತರಿಂದ ಖರೀದಿಸಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿರುವ ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ), ಕೃಷಿ ಸಂಶೋಧನಾ ಕೇಂದ್ರ (ಎಆರ್‌ಎಸ್‌) ಹಾಗೂ ಕೃಷಿ ಶಿಕ್ಷಣ ವಿಸ್ತರಣಾ ಕೇಂದ್ರದಲ್ಲಿ (ಎಇಇಸಿ) ಬೀಜ ವಿತರಣಾ ಕೇಂದ್ರಗಳನ್ನು ತೆರೆದು ವಿತರಿಸುತ್ತಿದೆ. ರೈತರಿಗೆ ಅನುಕೂಲ ಮಾಡಿಕೊಡಲು ಪ್ರತಿ ಜಿಲ್ಲೆಗೆ ಒಬ್ಬರು ಸಂಯೋಜಕರನ್ನೂ ನೇಮಕ ಮಾಡಿದೆ.

ಒಂದು ಎಕರೆಗೆ ಒಂದು ಕೆ.ಜಿಯ ಒಂದು ಪ್ಯಾಕೆಟ್‌ ಬೀಜ ಕೊಡಲಾಗುತ್ತಿದೆ. ಮುಂಗಾರು ಹಂಗಾಮು ಆರಂಭವಾಗುವ ಮೊದಲೇ ರೈತರು ಬೀಜ ಖರೀದಿಸಿಟ್ಟುಕೊಂಡು ಬಿತ್ತನೆಗೆ ಸಿದ್ಧತೆಯನ್ನೂ ಆರಂಭಿಸಿದ್ದಾರೆ. ಕೃಷಿ ವಿಜ್ಞಾನಿಗಳ ಮೇಲ್ವಿಚಾರಣೆಯಲ್ಲೇ ಬೀಜ ಉತ್ಪಾದನೆಯಾಗುತ್ತಿರುವ ಕಾರಣ ಗುಣಮಟ್ಟದ ಬೀಜದ ಬಗ್ಗೆ ರೈತರಲ್ಲಿ ವಿಶ್ವಾಸರ್ಹತೆ ಹೆಚ್ಚಿದೆ.

‘ಕೃಷಿ ವಿಶ್ವವಿದ್ಯಾಲಯದಿಂದ 10 ವರ್ಷಗಳಿಂದ ಬೀಜ ಒಯ್ಯುತ್ತಿರುವೆ. ಕಳೆದ ವರ್ಷ 110 ಎಕರೆ ಪ್ರದೇಶದಲ್ಲಿ 542 ಕ್ವಿಂಟಲ್ ತೊಗರಿ ಬಂದಿದೆ. ಈ ವರ್ಷ ಆರು ಕ್ವಿಂಟಲ್‌ ಬೀಜ ಖರೀದಿಸಿರುವೆ‘ ಎಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತಾವರಗೇರಾದ ರೈತ ದೊಡ್ಡನಗೌಡ ಸರನಗೌಡ ಹೇಳಿದರು.

‘ವಿಶ್ವವಿದ್ಯಾಲಯದ ಮೇಲೆ ವಿಶ್ವಾಸವಿಟ್ಟು ಕಳೆದ ವರ್ಷ ಬೀಜ ಖರೀದಿಸಿದ್ದೆ. ಮೂರು ಎಕರೆಯಲ್ಲಿ 16 ಪ್ಯಾಕೆಟ್‌ ತೊಗರಿ ಬಂದಿದೆ. ₹1.13 ಲಕ್ಷ ಆದಾಯ ಬಂದಿದೆ. ಈ ವರ್ಷವೂ ತೊಗರಿ ಬೀಜ ಖರೀದಿ ಮಾಡಿರುವೆ’ ಎಂದು ಲಿಂಗಸುಗೂರು ತಾಲ್ಲೂಕಿನ ಮುದಗಲ್‌ನ ಮೌಲಾಸಾಬ ತಿಳಿಸಿದರು.

‘ವಿಶ್ವವಿದ್ಯಾಲಯವು ನೋಂದಾಯಿತ ರೈತರ ಹೊಲದಲ್ಲಿ ಪ್ರಮಾಣಿತ ಬೀಜ ಬೆಳೆಯುತ್ತಿದೆ. ತೊಗರಿ, ಸೋಯಾ, ನವಣೆ ಹಾಗೂ ಕಡಲೆಗೆ ಬೇಡಿಕೆ ಇದೆ. ವಿಶ್ವವಿದ್ಯಾಲಯದ ವೀಕ್ಷಣಾ ತಂಡವು ಬಿತ್ತನೆ ಸಂದರ್ಭ, ಬೆಳೆಯುವ, ಹೂವು ಬಿಡುವ, ಕಾಳು ಕಟ್ಟುವ ಹಾಗೂ ಕಟಾವು ಸಂದರ್ಭದಲ್ಲಿ ವಿಜ್ಞಾನಿಗಳ ವೀಕ್ಷಣಾ ತಂಡ ಭೇಟಿ ನೀಡಿ ಪರಿಶೀಲಿಸುತ್ತದೆ‘ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಬೀಜ ಘಟಕದ ವಿಶೇಷ ಅಧಿಕಾರಿ ಅರುಣಕುಮಾರ ಹೊಸಮನಿ ಹೇಳಿದರು.

‘ವೀಕ್ಷಣಾ ತಂಡದಲ್ಲಿ ರಾಜ್ಯ ಬೀಜ ನಿಗಮ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ, ರಾಷ್ಟ್ರೀಯ ಬೀಜ ನಿಗಮ, ಕೃಷಿ ಇಲಾಖೆ, ಕರ್ನಾಟಕ ಸಹಕಾರ ಎಣ್ಣೆಬೀಜಗಳ ಬೆಳೆಗಾರರ ​​ಒಕ್ಕೂಟದ ಸದಸ್ಯರೂ ಇದ್ದಾರೆ. ನಾಲ್ಕು ಹಂತಗಳಲ್ಲಿ ಪರಿಶೀಲನೆ ನಡೆದ ನಂತರವೇ ವಿಶ್ವವಿದ್ಯಾಲಯದ ಬ್ರ್ಯಾಂಡ್‌ನ ಅಡಿಯಲ್ಲೇ ಗುಣಮಟ್ಟದ ಬೀಜ ಮಾರಾಟಕ್ಕೆ ಬಿಡುಗಡೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

‘ಒಣ ಬೇಸಾಯಕ್ಕೆ ಸೂಕ್ತವಾದ ತಳಿಗಳನ್ನು ವಿಶ್ವವಿದ್ಯಾಲಯವೇ ಅಭಿವೃದ್ಧಿಪಡಿಸಿ ಮಾರಾಟ ಮಾಡುತ್ತಿದೆ. ಟಿಎಸ್‌–3ಆರ್ ತೊಗರಿಗೆ ಹೆಚ್ಚಿನ ಬೇಡಿಕೆ ಇದೆ. ಮೊದಲು ಬಂದವರಿಗೆ ಆದ್ಯತೆ ಮೇಲೆ ಬೀಜ ಕೊಡುತ್ತಿದ್ದೇವೆ. ಕೃಷಿ ವಿಶ್ವವಿದ್ಯಾಲಯದ ಬೀಜೋತ್ಪಾದನೆ ಕಾರ್ಯಕ್ರಮ ಪರಿಗಣಿಸಿ ಐಸಿಎಆರ್– ಭಾರತೀಯ ಬೀಜ ವಿಜ್ಞಾನ ಸಂಸ್ಥೆಯು 2017–2018ರಲ್ಲಿ ಅತ್ಯುತ್ತಮ ಬೀಜೋತ್ಪಾದನಾ ಕೇಂದ್ರದ ಪ್ರಶಸ್ತಿಯನ್ನೂ ಪ್ರದಾನ ಮಾಡಿದೆ’ ಎಂದು ಖುಷಿ ಹಂಚಿಕೊಂಡರು.

ವಿಶ್ವವಿದ್ಯಾಲಯದಲ್ಲಿ ಲಭ್ಯವಿರುವ ಬೀಜ

* ತೊಗರಿ–ಟಿಎಸ್‌–3ಆರ್

* ತೊಗರಿ–ಜೆಆರ್‌ಜಿ811

* ತೊಗರಿ– ಜೆಆರ್‌ಜಿ152

* ನವಣೆ–ಎಚ್‌ಎನ್‌–46

* ಸೋಯಾ ಅವರೆ–ಡಿಎಸ್‌ಬಿ21

* ಮೇವಿನ ಬೀಜ–ಸಿಒಎಸ್‌ಎಫ್–31

* ಸೆಣಬು–ಲೋಕಲ್

ಹೈಬ್ರಿಡ್‌ ಸೂರ್ಯಕಾಂತಿ– ಆರ್‌ಎಸ್‌ಎಫ್‌ಎಚ್700

ಅದೇ ರೀತಿ ಬೆಂಗಳೂರು,ಧಾರವಾಡ ವಿಶ್ವವಿದ್ಯಾಲಯಗಳಲ್ಲೂ ರೈತರಿಗೆ ಬೇಕಾದ ಬೀಜಗಳು ದೊರೆಯುತ್ತವೆ.

]]>
Fri, 23 May 2025 17:36:58 +0530 shivuagrico
Bele vime&ರಾಜ್ಯದ 5.58 ಲಕ್ಷ ರೈತರ ಖಾತೆಗೆ 1248 ಕೋಟಿ ಬಾಕಿ ಬೆಳೆವಿಮೆ ಹಣ ಜಮಾ https://krushirushi.in/Bele-vime-2111 https://krushirushi.in/Bele-vime-2111 Bele vime-ರಾಜ್ಯದ 5.58 ಲಕ್ಷ ರೈತರ ಖಾತೆಗೆ 1248 ಕೋಟಿ ಬಾಕಿ ಬೆಳೆವಿಮೆ ಹಣ ಜಮಾ

2023-24 ನೇ ಸಾಲಿನ ರಾಜ್ಯದ 5.58 ಲಕ್ಷ ರೈತರ ಖಾತೆಗೆ 1248 ಕೋಟಿ ಬಾಕಿ ಬೆಳೆವಿಮೆ ಹಣ ಜಮಾ 

ಅದೇ ರೀತಿ ಹವಾಮಾನ ಆಧರಿತ ಬೆಳೆ ವಿಮೆಯಿಂದ(WBCIS) ವಂಚಿತಗೊಂಡಿದ್ದ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ರೈತ ಫಲಾನುಭವಿಗಳಿಗೆ ಖುಷಿ ಸುದ್ದಿಯೊಂದನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಿಸಿದ್ದಾರೆ. 


ಜಿಲ್ಲೆಯ ಕೆಲ ಪಂಚಾಯ್ ವ್ಯಾಪ್ತಿಯ ರೈತರಿಗಷ್ಟೇ ಸುಮಾರು 10 ಕೋಟಿ ಅಷ್ಟು ಬೆಳೆ ವಿಮೆ(Belevime) ಬಂದಿದ್ದು, ಉಳಿದ ಬಹುಪಾಲು ಫಲಾನುಭವಿ ರೈತರಿಗೆ ತಾಂತ್ರಿಕ ಕಾರಣ ನೆಪವೊಡ್ಡಿ ವಿಮಾ ಕಂಪನಿ ವಿಮಾ ಪರಿಹಾರ ಮೊತ್ತ ಜಮಾ ಮಾಡಿರಲಿಲ್ಲ. ಕೇಂದ್ರ ಸರಕಾರದ ಬಳಿ ಜಿಲ್ಲೆಯ ರೈತರ ಸಮಸ್ಯೆ ಪ್ರಸ್ತಾಪಿಸಿದ್ದೆ. ಕಾಲಮಿತಿಯ ಗಡುವು ನೀಡಿ ಕೇಂದ್ರ ಸರಕಾರವೂ 3 ಸಲ ವಿಮಾ ಕಂಪನಿಗೆ ಆದೇಶ ಮಾಡಿತ್ತು. ಆದರೆ ವಿಮಾ ಪಾವತಿಗೆ ರಾಜ್ಯ ಸರಕಾರದಿಂದ ಮಾಹಿತಿ ಸಮರ್ಪಕವಾಗಿ ಸಿಕ್ಕಿಲ್ಲ ಎಂದು ವಿಮಾ ಕಂಪನಿ ಪುನಃ ದೂರುತ್ತಲೇ ಇತ್ತು. ಕೇಂದ್ರದ ಆದೇಶಕ್ಕೆ ಅಂತೂ ಮಣಿದ ವಿಮಾ ಕಂಪನಿ  ಜಿಲ್ಲೆಯ ರೈತರಿಗೆ ವಿಮಾ ಪರಿಹಾರ(Crop insurance) ಮೊತ್ತ ಪಾವತಿಸಲು ಆರಂಭಿಸಿದೆ ಎಂದು ಸಂಸದ ಕಾಗೇರಿ ವಿವರಿಸಿದ್ದಾರೆ. 


ರಾಜ್ಯ ಸರಕಾರ ಮಳೆ ಮಾಪನ ಕೇಂದ್ರ ಸಹಿತ ಹಲವು ಸಂಗತಿಗಳ ನಿರ್ವಹಣೆ ಸರಿಯಾಗಿ ಮಾಡದ ಪರಿಣಾಮ ಪರಿಹಾರಕ್ಕೆ ಕೇಂದ್ರ ಸರಕಾರ ಮಧ್ಯ ಪ್ರವೇಶಿಸುವಂತೆ ಆಗಿತ್ತು. ಇನ್ನು 3-4 ದಿನದಲ್ಲಿ ಹಣ ಬಂದು ರೈತರ ಖಾತೆಗೆ ಜಮಾ ಆಗಲಿದೆ ಎಂದಿದ್ದಾರೆ. 
ರೈತರಿಗೆ ನ್ಯಾಯ ಕೊಡಿಸಲು ನೆರವಾದ ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್, ಕೇಂದ್ರದ ಅಧಿಕಾರಿಗಳನ್ನು ಹಾಗೂ ತಡವಾದರೂ ರೈತರಿಗೆ ನ್ಯಾಯ ಕೊಡಿಸಲು ಸಹಕಾರ ನೀಡಿದ ರಾಜ್ಯ ಸರಕಾರದ ಅಧಿಕಾರಿಗಳಿಗೆ ಮತ್ತು ಜಿಲ್ಲಾಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಮತ್ತು ಮರಳಿ ಈ ಸಮಸ್ಯೆ ಆಗದಂತೆ ರಾಜ್ಯ ಸರಕಾರ ತಕ್ಷಣ ಕ್ರಮವಹಿಸಿ ಮಳೆ ಮಾಪನ ಕೇಂದ್ರ ಸರಿಯಾಗಿ ನಿರ್ವಹಣೆ ಮಾಡಬೇಕು ಎಂದೂ ಸಂಸದ ಕಾಗೇರಿ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ. 

Bele vime-ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Thu, 22 May 2025 23:54:13 +0530 shivuagrico
Mungaru 2025&ಮೇ 27 ಅಲ್ಲ,ಅದಕ್ಕಿಂತಲೂ ಮೊದಲೇ ಮುಂಗಾರು ಪ್ರವೇಶ https://krushirushi.in/Mungaru-2025 https://krushirushi.in/Mungaru-2025 Mungaru 2025-ಮೇ 27 ಅಲ್ಲ,ಅದಕ್ಕಿಂತಲೂ ಮೊದಲೇ ಮುಂಗಾರು ಪ್ರವೇಶ

ನೈಋತ್ಯ ಮಾನ್ಸೂನ್ (Monsoon 2025) ಮುಂದಿನ 4ರಿಂದ 5 ದಿನಗಳಲ್ಲಿ ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಪ್ರತಿ ವರ್ಷ ಜೂನ್ ತಿಂಗಳ ಆರಂಭದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶವಾಗುತ್ತಿತ್ತು.

ಆದರೆ ಈ ವರ್ಷ ಬಹಳ ಮುಂಚೆಯೇ ಆಗಬಹುದು. ಐಎಂಡಿ ಈ ಹಿಂದೆ ಮೇ 27ರ ವೇಳೆಗೆ ಮಾನ್ಸೂನ್ ಕೇರಳವನ್ನು ತಲುಪುತ್ತದೆ ಎಂದು ನಿರೀಕ್ಷಿಸಿತ್ತು. ಆದರೆ, ಅದಕ್ಕೂ 2-3 ದಿನಗಳು ಮುಂಚಿತವಾಗಿಯೇ ಮಾನ್ಸೂನ್ಆಗಮನವಾಗುವ ಸಾಧ್ಯತೆಯಿದೆ. ಮುಂಚಿತವಾಗಿ ಮಳೆಯಾಗುವುದರಿಂದ ಬಿಸಿಲಿನ ಬೇಗೆ ಕಡಿಮೆಯಾಗುವುದಲ್ಲದೆ, ಭತ್ತ, ಜೋಳ, ಹತ್ತಿ, ಸೋಯಾಬೀನ್ ಮತ್ತು ಇತರ ಎಣ್ಣೆಬೀಜಗಳಂತಹ ಬಂಪರ್ ಬೆಳೆಗಳ ಬಿತ್ತನೆಯೂ ಹೆಚ್ಚಾಗುತ್ತದೆ.

“ಪ್ರಸ್ತುತ ಇರುವ ವೇಗದಲ್ಲಿಯೇ ಮಳೆ ಮುಂದುವರೆದರೆ ಮತ್ತು ಇತರ ಪರಿಸ್ಥಿತಿಗಳು ಅನುಕೂಲಕರವಾಗಿದ್ದರೆ ಮುಂದಿನ 4-5 ದಿನಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಆರಂಭಕ್ಕೆ ಪರಿಸ್ಥಿತಿಗಳು ಅನುಕೂಲಕರವಾಗುವ ಸಾಧ್ಯತೆಯಿದೆ” ಎಂದು ಐಎಂಡಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ವರ್ಷ, ಮಾನ್ಸೂನ್ ಮೇ 30ರಂದು ಕೇರಳದ ಕರಾವಳಿಯನ್ನು ತಲುಪಿತು. ಇದಕ್ಕೂ ಮೊದಲು ಜೂನ್ 8 (2023), ಮೇ 29 (2022), ಜೂನ್ 3 (2021) ಮತ್ತು ಜೂನ್ 1 (2020)ರಂದು ಕೇರಳದಲ್ಲಿ ಮುಂಗಾರು ಪ್ರವೇಶವಾಗಿತ್ತು.

ನೈಋತ್ಯ ಮಾನ್ಸೂನ್ ಭಾರತದ ಕೃಷಿ ಆರ್ಥಿಕತೆಗೆ ಅತ್ಯಗತ್ಯವಾಗಿದ್ದು, ವಾರ್ಷಿಕ ಮಳೆಯ ಸುಮಾರು 70%ರಷ್ಟು ಭಾಗವನ್ನು ಹೊಂದಿದೆ. ಇದು ದೇಶದ ನಿವ್ವಳ ಬಿತ್ತನೆ ಪ್ರದೇಶದ ಸುಮಾರು 51% ಅನ್ನು ಬೆಂಬಲಿಸುತ್ತದೆ.

ಮೇ 13ರಂದು ದಕ್ಷಿಣ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ದಕ್ಷಿಣ ಅಂಡಮಾನ್ ಸಮುದ್ರ, ನಿಕೋಬಾರ್ ದ್ವೀಪಗಳು ಮತ್ತು ಉತ್ತರ ಅಂಡಮಾನ್ ಸಮುದ್ರದ ಕೆಲವು ಭಾಗಗಳಿಗೆ ಮಾನ್ಸೂನ್ ನಿಗದಿತ ಸಮಯಕ್ಕಿಂತ 2 ದಿನ ಮುಂಚಿತವಾಗಿ ಪ್ರವೇಶಿಸಿತ್ತು. ದಕ್ಷಿಣ ಅರೇಬಿಯನ್ ಸಮುದ್ರ, ಮಾಲ್ಡೀವ್ಸ್ ಮತ್ತು ಕೊಮೊರಿನ್ ಪ್ರದೇಶದ ಹೆಚ್ಚಿನ ಭಾಗಗಳು ಅದರಲ್ಲೂ ಲಕ್ಷದ್ವೀಪದ ಕೆಲವು ಭಾಗಗಳು, ಕೇರಳ, ತಮಿಳುನಾಡು, ಕರ್ನಾಟಕ, ದಕ್ಷಿಣ ಮತ್ತು ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಈಶಾನ್ಯ ಬಂಗಾಳ ಕೊಲ್ಲಿಯ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಈ ವರ್ಷ ದೇಶಾದ್ಯಂತ ನೈಋತ್ಯ ಮಾನ್ಸೂನ್ ಋತುಮಾನದ ಮಳೆ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ. ಮೇ 22ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳು ರೆಡ್ ಅಲರ್ಟ್‌ನಲ್ಲಿವೆ. ಕೇರಳ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಮೇ 24ರವರೆಗೆ ಭಾರೀ ಮಳೆಯಾಗುವ ಬಗ್ಗೆ ಐಎಂಡಿ ಎಚ್ಚರಿಕೆ ನೀಡಿದೆ.

SACHET-ಹವಾಮಾನ ಮುನ್ಸೂಚನೆಗೆ ಹೊಸ ಆ್ಯಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ,ನಿಮ್ಮ ಮೊಬೈಲ್ ನಲ್ಲೇ ಹೀಗೆ ತಿಳಿದುಕೊಳ್ಳಿ ಹವಾಮಾನ ಮುನ್ಸೂಚನೆ


ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ಮನ್ ಕಿ ಬಾತ್‌ನಲ್ಲಿ (Mann Ki Baat)ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA)ದ CAP ಆಧಾರಿತ ಇಂಟಿಗ್ರೇಟೆಡ್ ಅಲರ್ಟ್ ಸಿಸ್ಟಮ್ ಸ್ಯಾಚೆಟ್ ಆಪ್‌ ಬಗ್ಗೆ ಉಲ್ಲೇಖಿಸಿದ್ದಾರೆ. ಈ ವ್ಯವಸ್ಥೆಯು ಭಾರತದಾದ್ಯಂತ ಲಭ್ಯವಿದ್ದು, ಅದರ ವೆಬ್‌ಸೈಟ್‌ನಲ್ಲಿ ಉಲ್ಲೇಖಿಸಿದಂತೆ ಭೂ ಗುಪ್ತಚರವನ್ನು ಬಳಕೆ ಮಾಡಿಕೊಂಡು ಬಹು ತಂತ್ರಜ್ಞಾನದ ಮೂಲಕ ಮುಂಚಿನ ಎಚ್ಚರಿಕೆಯ ನೈಜ-ಸಮಯದ ಬಗ್ಗೆ ಮಾಹಿತಿಯನ್ನು ಪಡೆಯಬಹುದಾಗಿದೆ.

ಸಚೇತ್‌ನ ವೆಬ್‌ಸೈಟ್ ಪ್ರಕಾರ,"XX-NDMAEW ಹೆಡರ್‌ನಿಂದ ಎಸ್‌ಎಂಎಸ್‌ ಮೂಲಕ ವಿಪತ್ತು ಎಚ್ಚರಿಕೆಗಳನ್ನು ಸ್ವೀಕರಿಸಿಕೊಳ್ಳಬಹುದಾಗಿದ್ದು, ಬಳಕೆದಾರರು ಜಾಗರೂಕರಾಗಿರಬಹುದಾಗಿದೆ. ಆಯಪ್ ಅನ್ನು ಪ್ರತ್ಯೇಕವಾಗಿ "ಹವಾಮಾನ ಮುನ್ಸೂಚನೆ ಮಾಹಿತಿಗಾಗಿ ಮತ್ತು ಬಹು ಸ್ಥಳಗಳ ಚಂದಾದಾರಿಕೆ ಸೌಲಭ್ಯದೊಂದಿಗೆ ವಿಪತ್ತು ಎಚ್ಚರಿಕೆಗಳನ್ನು ಸ್ವೀಕರಿಸಲು ಬಳಸಬಹುದು". ಎಂದು ಮೋದಿ ತಿಳಿಸಿದ್ದಾರೆ.

ಬಳಕೆದಾರರು ತಮ್ಮ ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಬ್ರೌಸರ್‌ಗಳಲ್ಲಿ ಬ್ರೌಸರ್ ನೋಟಿಫಿಕೇಶ್‌ ಅನ್ನು ಪಡೆಯುತ್ತಾರೆ. ಬಳಕೆದಾರರು ವಿಪತ್ತು ಸಂಬಂಧಿತ ಮಾಹಿತಿಯ ಅಧಿಸೂಚನೆಯನ್ನು ತತ್‌ ಕ್ಷಣವೇ ಪಡೆಯಬಹುದು ಎಂದು ವೆಬ್‌ಸೈಟ್ ನಲ್ಲಿ ಉಲ್ಲೇಖ ಮಾಡಿದೆ.

ಆರ್‌ಎಸ್‌ಎಸ್ ಫೀಡ್‌ನಲ್ಲಿಯೂ ಎಚ್ಚರಿಕೆಯನ್ನು ಪ್ರಕಟಿಸಲಾಗುತ್ತದೆ. ಅಲ್ಲದೆ ಸುದ್ದಿ ಸಂಸ್ಥೆಗಳು ಇದಕ್ಕೆ ಚಂದಾದಾರರಾಗಿದ್ದರೆ ಮುಂಚಿತವಾಗಿ ಈ ಬಗ್ಗೆ ಮಾಹಿತಿ ಪ್ರಕಟ ಮಾಡಬಹುದಾಗಿದೆ. ಈ ಮೂಲಕ ಮುಂದೆ ಆಗುವ ದೊಡ್ಡ ಮಟ್ಟದ ಅನಾಹುತಗಳನ್ನು ತಪ್ಪಿಸಬಹುದಾಗಿದೆ.

ವೆಬ್‌ಸೈಟ್‌ನಲ್ಲಿ ಪ್ರಕಟವಾದ ಮಾಹಿತಿಯ ಪ್ರಕಾರ, ಆಪ್‌ ಅನ್ನು ಉತ್ತರ ಪ್ರದೇಶದಲ್ಲಿ ಸುಮಾರು 5.4 ಕೋಟಿ ಜನರು, ರಾಷ್ಟ್ರ ರಾಜಧಾನಿಯಲ್ಲಿ 4.6 ಕೋಟಿ ಜನರು, ಮಹಾರಾಷ್ಟ್ರದಲ್ಲಿ 1.1 ಕೋಟಿ ಜನರು ಡೌನ್‌ಲೋಡ್ ಮಾಡಿದ್ದಾರೆ.

ನೀವೂ ಆ್ಯಪ್ ಮೂಲಕ ಮಳೆ ಮುನ್ಸೂಚನೆ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.cdotindia.capsachet

ನಂತರ ಆ್ಯಪ್ ಡೌನಲ್ಲೋಡ್ ಮಾಡಿಕೊಳ್ಳಿ

ನಂತರ ಮುಂದೆ ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಮುಂದೆ ಮೇಲೆ ಕ್ಲಿಕ್ ಮಾಡಿ

ನಂತರ /(Yes) ಮಾರ್ಕ್ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಸಂಖ್ಯೆ ಅಥವಾ ಇಮೇಲ್ ಐಡಿಯನ್ನು ನಮೂದಿಸಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ

ನಂತರ ಈ ಕೆಳಗಿನಂತೆ ನಿಮಗೆ ಹವಾಮಾನ ಮಾಹಿತಿ ಸಿಗಲಿದೆ

]]>
Wed, 21 May 2025 20:58:17 +0530 shivuagrico
ಕೊನೆಗೂ ಜಮಾ ಆಯ್ತು 3 ತಿಂಗಳ ಪೇಂಡಿಗ್ 6000 ರೂಪಾಯಿ ಗೃಹಲಕ್ಷ್ಮಿ ಹಣ&Gruhalakshmi pending amount https://krushirushi.in/Gruhalakshmi-pending-amount-2109 https://krushirushi.in/Gruhalakshmi-pending-amount-2109 ಕೊನೆಗೂ ಜಮಾ ಆಯ್ತು 3 ತಿಂಗಳ ಪೇಂಡಿಗ್ 6000 ರೂಪಾಯಿ ಗೃಹಲಕ್ಷ್ಮಿ ಹಣ-Gruhalakshmi pending amount

ಬಾಕಿ ಉಳಿದಿರುವ ಮೂರು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಒಟ್ಟಿಗೆ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನವರಿ, ಫೆಬ್ರವರಿ, ಮಾರ್ಚ್ ಈ ಮೂರು ತಿಂಗಳ ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.

ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್‌ ಖಾತೆಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. 

 

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Wed, 21 May 2025 20:10:24 +0530 shivuagrico
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ&pmkisan 20th instalment ineligible list https://krushirushi.in/Pmkisan-20th-instalment-ineligible-list-2108 https://krushirushi.in/Pmkisan-20th-instalment-ineligible-list-2108 ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 20th instalment ineligible list


ವರ್ಷದಲ್ಲಿ ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯ (ಪಿಎಂ-ಕಿಸಾನ್) ಫಲಾನುಭವಿಗಳ ಸಂಖ್ಯೆ(pmkisan 20th instalment ineligible list) ಐದು ಲಕ್ಷದಿಂದ ಆರು ಲಕ್ಷದಷ್ಟು ಕುಸಿತವಾಗಿದೆ.


ಲೋಕಸಭೆಯಲ್ಲಿ ಮೈಸೂರು ಸಂಸದ ಯದುವೀ‌ರ್ ಒಡೆಯ‌ರ್ ಮಂಗಳವಾರ ಕೇಳಿದ ಪ್ರಶ್ನೆಗೆ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್ ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ.


13ನೇ ಕಂತಿನವರೆಗೆ (2023ರ ಮಾರ್ಚ್) ರಾಜ್ಯದ ಫಲಾನುಭವಿಗಳ ಸಂಖ್ಯೆ 49 ಲಕ್ಷದಷ್ಟು ಇತ್ತು. 14ನೇ ಕಂತಿನಲ್ಲೂ ಫಲಾನುಭವಿಗಳ ಸಂಖ್ಯೆ 49.34 ಲಕ್ಷ ಆಗಿತ್ತು. 15ನೇ ಕಂತಿನಲ್ಲಿ ಈ ಸಂಖ್ಯೆ 43.78 ಲಕ್ಷಕ್ಕೆ ಕುಸಿಯಿತು. ಆ ಬಳಿಕ ಸಂಖ್ಯೆಯಲ್ಲಿ ಗಣನೀಯ ಏರಿಕೆ ಆಗಿಲ್ಲ.


ಪಿಎಂ- ಕಿಸಾನ್ ಯೋಜನೆಯಡಿ ಕೃಷಿಕರಿಗೆ ವಾರ್ಷಿಕ ₹6 ಸಾವಿರ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಈ ಮೊತ್ತವನ್ನು ₹8 ಸಾವಿರ ಅಥವಾ ₹12 ಸಾವಿರಕ್ಕೆ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Pmkisan 19th instalment ineligible list-ಪಿಎಂ ಕಿಸಾನ್ 19ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

ಇದನ್ನೂ ಓದಿ

 ಪಿಎಂ ಕಿಸಾನ್ ಸಮ್ಮಾನ ನಿಧಿ 12,000 ಕ್ಕೆ ಏರಿಕೆಗೆ ಪ್ರಸ್ತಾವನೆ, ಯಾರಿಗೆಲ್ಲಾ ಸಿಗಲಿದೆ 19ನೇ ಕಂತು ಹೀಗೆ ಚೆಕ್ ಮಾಡಿ-Pmkisan 19th instalment - https://krushirushi.in/Pmkisan-19th-instalment-1731 

]]>
Wed, 21 May 2025 06:13:48 +0530 shivuagrico
ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ&Input subsidy for croploss https://krushirushi.in/Input-subsidy-for-crop-loss-2107 https://krushirushi.in/Input-subsidy-for-crop-loss-2107 Input subsidy for croploss-ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.


ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್‌ ಸಬ್ಸಿಡಿ ರೈತರ ಬ್ಯಾಂಕ್‌ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Tue, 20 May 2025 19:47:41 +0530 shivuagrico
Karnataka rains&ಬೇಸಿಗೆಯಲ್ಲಿ ಮಳೆಗಾಲದ ರೀತಿಯ ಮಳೆ ಯಾಕಾಗ್ತಿದೆ? 6 ಜಿಲ್ಲೆಗಳಿಗೆ ರೆಡ್ ಅಲರ್ಟ್ https://krushirushi.in/Karnataka-rains-2106 https://krushirushi.in/Karnataka-rains-2106 Karnataka rains-ಬೇಸಿಗೆಯಲ್ಲಿ ಮಳೆಗಾಲದ ರೀತಿಯ ಮಳೆ ಯಾಕಾಗ್ತಿದೆ? 6 ಜಿಲ್ಲೆಗಳಿಗೆ ರೆಡ್ ಅಲರ್ಟ್


ಬೇಸಿಗೆ ಋತು ಉತ್ತುಂಗದಲ್ಲಿರು ವಾಗಲೇ ರಾಜ್ಯದ ಅನೇಕ ಕಡೆ ಕೆಲ ದಿನ ಗಳಿಂದ ನಿರಂತರ ಮಳೆಯಾಗುತ್ತಿದೆ. ತಾಪ ಮಾನ ತಗ್ಗಿ ಬಿಸಿಲೂರಿನ ಜಿಲ್ಲೆಗಳ ಜನ ನಿಟ್ಟುಸಿರು ಬಿಟ್ಟಿದ್ದರೆ, ಹಲ ವೆಡೆ ರೈತರು ಮುಂಗಾರು ಆರಂಭ ಮುನ್ನವೇ ಕೃಷಿ “ಆರಂಭ’ಕ್ಕೆ ತೊಡಗಿದ್ದಾರೆ.

ಕೆಲವೆಡೆ ವಾಣಿಜ್ಯ ಬೆಳೆಗಳಿಗೆ ಅಕಾಲಿಕ ಮಳೆಯಿಂದ ಹಾನಿಯಾಗಿದೆ. ಬೇಸಿಗೆಯಲ್ಲಿ ಈ ಪರಿ ಮಳೆ ಯಾಕಾಗುತ್ತಿದೆ? ಈ ಪ್ರಶ್ನೆಗೆ ಹವಾಮಾನ ಇಲಾಖೆ ನೀಡುತ್ತಿರುವ ಕಾರಣ, ಸಮುದ್ರ, ಭೂಮಿ ಮೇಲ್ಮೈ ನ ವಾಯುಭಾರ ಕುಸಿತ, ದೊಡ್ಡ ಗಾತ್ರದ ವಾಯುಭಾರ ಕುಸಿತ ಪ್ರದೇಶಗಳ ಸೃಷ್ಟಿ.

ತಮಿಳುನಾಡು ಸಮೀಪ ಪೂರ್ವ ಕರಾವಳಿಯ ಬಂಗಾಳಕೊಲ್ಲಿಯಲ್ಲಿ 1.5 ಕಿಮೀ ಅಗಲ ಹಾಗೂ 5.8 ಕಿ.ಮೀ. ಎತ್ತರದಷ್ಟು ಗಾತ್ರದ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದ ಒಳನಾಡಿನ ಮೇಲ್ಮೆ„ಯಲ್ಲೂ ಈ ರೀತಿಯ ವಾತಾವರಣವಿದೆ.

ಇದರಿಂದ ನಿರಂತರವಾಗಿ ಮಳೆಯಾಗುತ್ತಿದೆ. ಈ ಮಧ್ಯೆ, ಪಶ್ಚಿಮ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಮೇ 22ರಂದು ವಾಯುಭಾರ ಕುಸಿತ ಉಂಟಾಗುವ ನಿರೀಕ್ಷೆ ಇದ್ದು, ಇದರ ಪೂರ್ವ ಪರಿಣಾಮವಾಗಿ ಮೇ 19ರಿಂದ ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಬೆಂಗಳೂರಲ್ಲಿ 2-3 ದಿನ ಮಳೆ: ಬೆಂಗಳೂರಿನಲ್ಲಿ ಮೇ 21ರ ವರೆಗೆ ಗುಡುಗು, ಮಿಂಚು ಸಮೇತವಾಗಿ ಸಾಧಾರಣ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಮೇ 19, 20ರಂದು ಹಳದಿ ಅಲರ್ಟ್‌ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಮೋಡಕವಿದ ವಾತಾವರಣ ಇರಲಿದೆ. ಜೊತೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಹಾಗೂ 20 ಡಿ.ಸೆ ಇರಲಿದೆ.

ಹಾವೇರಿ: ಗರಿಷ್ಠ 13 ಸೆಂಮೀ ಮಳೆ
ಕರಾವಳಿ ಕರ್ನಾಟಕ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾನುವಾರ ಮಳೆಯಾಗಿದೆ. ಹಾವೇರಿ 13, ಯಾದಗಿರಿ 10, ರಾಯಚೂರು 9, ಬೆಂಗಳೂರು 3, ಚಿತ್ರದುರ್ಗ, ಉತ್ತರ ಕನ್ನಡ ಜಿಲ್ಲೆ 5, ದಕ್ಷಿಣ ಕನ್ನಡದ ಪುತ್ತೂರಿನಲ್ಲಿ 2 ಸೆಂ.ಮೀ ಮಳೆಯಾಗಿದೆ. ಉಳಿದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

ಚಿತ್ರದುರ್ಗಕ್ಕೆ ರೆಡ್‌ ಅಲರ್ಟ್‌
ಬೆಳಗಾವಿ, ಧಾರವಾಡ, ಹಾವೇರಿ ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮೇ 19 ರಿಂದ 22ರ ವರೆಗೆ ಆರೆಂಜ್‌ ಅಲರ್ಟ್‌ ಅನ್ನು ಘೋಷಿಸಲಾಗಿದೆ. ಮೇ 19 ಹಾಗೂ 20ರಂದು ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಚಿತ್ರದುರ್ಗ ಜಿಲ್ಲೆಗೆ ಮೇ 19ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳವರೆಗೆ ಭಾರಿ ಹಾಗೂ ಅತೀ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಮಳೆಯ ಜೊತೆಗೆ ಗಾಳಿಯ ವೇಗವು ಪ್ರತಿ ಘಂಟೆಗೆ 50 ಕಿ.ಮೀ ಇರಲಿದೆ. ಜನ ಸಮಾನ್ಯರು ಮಳೆಯ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡರೆ ಉತ್ತಮ.
●ಸಿ.ಎಸ್‌.ಪಾಟೀಲ್‌, ನಿರ್ದೇಶಕ, ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗ

]]>
Tue, 20 May 2025 05:47:20 +0530 shivuagrico
Gruhalakshmi amount&ಈ ಜಿಲ್ಲೆಗಳ ಗೃಹಿಣಿಯರಿಗೆ 1,095 ಕೋಟಿ ಗೃಹಲಕ್ಷ್ಮಿ ಹಣ ಬಿಡುಗಡೆ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Gruhalakshmi-amount-2105 https://krushirushi.in/Gruhalakshmi-amount-2105 Gruhalakshmi pending payment-ಈ ಪಟ್ಟಿಯಲ್ಲಿರುವವರಿಗೆ ಪ್ರತಿ ವಾರ ಒಂದು ಕಂತಿನಂತೆ ಮುಂದಿನ 3 ವಾರ 3 ಕಂತಿನ ಗೃಹಲಕ್ಷ್ಮಿ ಹಣ ಜಮಾ

ಉಡುಪಿ ಜಿಲ್ಲಾ ಪಂಚಾಯತ್‌, ಕೃಷಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳು ಹಣ ಬಾಕಿ ಉಳಿದಿದೆ. ಈ ಬಾಕಿ ಉಳಿದ ಹಣವನ್ನ ಹಂತ ಹಂತವಾಗಿ ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದು, ಆದಷ್ಟು ಶೀಘ್ರದಲ್ಲಿ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. 

ಬಾಕಿ ಇರುವ ಮೂರು ತಿಂಗಳ-ಜನವರಿ, ಫೆಬ್ರವರಿ ಮತ್ತು ಮಾರ್ಚ್-ಕಂತಿನ ಮೊತ್ತವನ್ನು ಮೇ ತಿಂಗಳಲ್ಲಿ ಹಂತಹಂತವಾಗಿ ಬಿಡುಗಡೆ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಕಂತುಗಳಿಗೆ ಹಣಕಾಸು ಇಲಾಖೆಯಿಂದ ಈಗಾಗಲೇ ಅನುಮೋದನೆ ಲಭಿಸಿದೆ. ಮೊದಲ ಕಂತು ಒಂದು ವಾರದಲ್ಲಿ, ಎರಡನೇ ಕಂತು ಮುಂದಿನ ವಾರದಲ್ಲಿ ಹಾಗೂ ಮೂರನೇ ಕಂತು ತಿಂಗಳ ಅಂತ್ಯದೊಳಗೆ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ' ಎಂಬ ಭರವಸೆಯನ್ನು ನೀಡಿದ್ದಾರೆ. 

 

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Mon, 19 May 2025 18:22:13 +0530 shivuagrico
2019&20 ರಿಂದ 2023&24ರವರೆಗೆ ಬೆಳೆ ವಿಮೆ ಬಾಕಿ ಪಾವತಿ ವಿಫಲ ಪ್ರಕರಣಗಳ ಪಟ್ಟಿ ಬಿಡುಗಡೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಸರಿಪಡಿಸಿಕೊಂಡರೆ ಜಮಾ ಆಗಲಿದೆ ಹಣ&Belevime payment pending failed cases https://krushirushi.in/Belevime-pending-payment-failed-cases-2104 https://krushirushi.in/Belevime-pending-payment-failed-cases-2104 2019-20 ರಿಂದ 2023-24ರವರೆಗೆ ಬೆಳೆ ವಿಮೆ ಬಾಕಿ ಪಾವತಿ ವಿಫಲ ಪ್ರಕರಣಗಳ ಪಟ್ಟಿ ಬಿಡುಗಡೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಸರಿಪಡಿಸಿಕೊಂಡರೆ ಜಮಾ ಆಗಲಿದೆ ಹಣ-Belevime payment pending failed cases

ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/AadharNotSeededReport.aspx

ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ

ಈ ಕೆಳಗಿನ pdf ಡೌನ್ಲೊಡ್ ಮಾಡಿಕೊಂಡು ನಿಮ್ಮ ಹೆಸರು ಚೆಕ್ ಮಾಡಿ

]]>
Mon, 19 May 2025 12:42:30 +0530 shivuagrico
Karnataka rain report&ಮುಂದಿನ 3 ದಿನ ಭಾರಿ ಮಳೆ, ಈ 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ https://krushirushi.in/Karnataka-rain-report https://krushirushi.in/Karnataka-rain-report Karnataka rain report-ಮುಂದಿನ 3 ದಿನ ಭಾರಿ ಮಳೆ, ಈ 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.


ಇಂದು ಮತ್ತು ನಾಳೆ ತುಮಕೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮೇ. 20, 21 ರಂದು ಬಾಗಲಕೋಟೆ, ಬೀದರ್, ಧಾರಾವಾಡ, ಗದಗ, ಹಾವೇರಿ ಹಾಗೂ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಿದೆ.

ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಕೊಪ್ಪಳ, ವಿಜಯಪುರ, ರಾಯಚೂರು ಜಿಲ್ಲೆಗಳಿಗೆ ಮುಂದಿನ ಎರಡೂರು ದಿನಕ್ಕೆ, ಕರಾವಳಿ ಜಿಲ್ಲೆಗಳಿಗೆ ಇಡೀ ವಾರಕ್ಕೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ರಾಜ್ಯದಲ್ಲಿಮೇ23ರಿಂದಮಳೆ ಪ್ರಮಾಣಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಬೀದರ್, ರಾಯಚೂರು, ಯಾದಗಿರಿ, ದಾವಣಗೆರೆ ಮತ್ತು ಚಿತ್ರದುರ್ಗ ಮುಂತಾದ ಸ್ಥಳಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿರುವ ಇತ್ತೀಚಿನ ವರದಿ ಪ್ರಕಾರ, ರಾಜ್ಯದಲ್ಲಿ ಮೇ.22 ರವರೆಗೂ ಭಾರೀ ಮಳೆ ಸುರಿಯಲಿದೆ. ಶುಕ್ರವಾರ (ಮೇ.17) ಸಂಜೆಯ ನಂತರದಿಂದ ಮೇ.22ರ ತನಕ ಬಿರುಸಿನ ಮಳೆ ಹಲವೆಡೆ ಸುರಿಯಲಿದೆ ಎಂದು ತಿಳಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ವರುಣಾರ್ಭಟದ ಮುನ್ಸೂಚನೆಯನ್ನು ಇಲಾಖೆ ನೀಡಿದೆ.


ದಕ್ಷಿಣ ಕರ್ನಾಟದಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಗಾಳಿ ಮಳೆ ಸಂಭವಿಸಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಈ ಜಿಲ್ಲೆಗಳಿಗೆ ಯೆ ಲೆಅಲರ್ಟ್ ಘೋಷಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಬೀದ‌ರ್, ರಾಯಚೂರು ಯಾದಗಿರಿ, ದಾವಣಗೆರೆ, ಚಿತ್ರದುರ್ಗ ಮತ್ತು ಗಡಿಪ್ರದೇಶಗಳು ಯೆ ಅಲರ್ಟ್ ಗೆ ಒಳಪಟ್ಟಿವೆ.

]]>
Mon, 19 May 2025 06:25:49 +0530 shivuagrico
Ration card 2025&ಪಡಿತರ ಚೀಟಿದಾರರಿಗೆ ಮೇ 21ರಿಂದ ಹೊಸ ನಿಯಮ ಜಾರಿ,ರದ್ದಾಗಲಿವೆ ಇಂತವರ ಕಾರ್ಡಗಳು https://krushirushi.in/Ration-card-2025 https://krushirushi.in/Ration-card-2025 Ration card-ಪಡಿತರ ಚೀಟಿದಾರರಿಗೆ ಮೇ 21ರಿಂದ ಹೊಸ ನಿಯಮ ಜಾರಿ,ರದ್ದಾಗಲಿವೆ ಇಂತವರ ಕಾರ್ಡಗಳು


2025 ರಲ್ಲಿ ಭಾರತ ಸರ್ಕಾರ ಪಡಿತರ ಚೀಟಿಗೆ ಸಂಬಂಧಿಸಿದ ನಿಯಮಗಳಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ. ಈ ಬಾರಿ ಸರ್ಕಾರದ ಮುಖ್ಯ ಉದ್ದೇಶವೆಂದರೆ ಉಚಿತ ಪಡಿತರವನ್ನು ನಿಜವಾಗಿಯೂ ಪಡೆಯಲು ಅರ್ಹರಾಗಿರುವ ಜನರಿಗೆ ಮಾತ್ರ ನೀಡಬೇಕು. ಕಳೆದ ಕೆಲವು ವರ್ಷಗಳಲ್ಲಿ, ಆರ್ಥಿಕ ಸ್ಥಿತಿ ಸದೃಢವಾಗಿರುವ ಅನೇಕ ಜನರು ಸಹ ಈ ಯೋಜನೆಯ ಲಾಭ ಪಡೆಯುತ್ತಿರುವುದು ಕಂಡುಬಂದಿದೆ.

ಈ ಕಾರಣಕ್ಕಾಗಿ, ಸರ್ಕಾರವು ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಇದು ಮೇ 21, 2025 ರಿಂದ ಇಡೀ ದೇಶದಲ್ಲಿ ಜಾರಿಗೆ ಬರಲಿದೆ.

ಈ ಬದಲಾವಣೆಗಳ ನಂತರ, ಅನೇಕ ಜನರಿಗೆ ಉಚಿತ ಪಡಿತರ ಸೌಲಭ್ಯವನ್ನು ನಿಲ್ಲಿಸಬಹುದು. ವಿಶೇಷವಾಗಿ ಸರ್ಕಾರ ನಿಗದಿಪಡಿಸಿದ ಮಾನದಂಡಗಳಿಗಿಂತ ಹೆಚ್ಚಿನ ಆದಾಯ ಅಥವಾ ಆಸ್ತಿ ಹೊಂದಿರುವ ಜನರು. ಈ ನಿಯಮಗಳು ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ (ಪಿಡಿಎಸ್) ಪಾರದರ್ಶಕತೆಯನ್ನು ತರುತ್ತವೆ ಮತ್ತು ಪ್ರಯೋಜನಗಳು ಸರಿಯಾದ ಜನರನ್ನು ತಲುಪುತ್ತವೆ ಎಂದು ಸರ್ಕಾರ ಹೇಳುತ್ತದೆ.

ಪ್ರಮುಖ ಬದಲಾವಣೆಗಳು

ಸರ್ಕಾರ ಜಾರಿಗೆ ತಂದಿರುವ ಹೊಸ ನಿಯಮಗಳು ಉಚಿತ ಪಡಿತರ ಪ್ರಯೋಜನಗಳು ಅಗತ್ಯವಿರುವವರಿಗೆ ಮಾತ್ರ ತಲುಪುವಂತೆ ನೋಡಿಕೊಳ್ಳುವ ಗುರಿಯನ್ನು ಹೊಂದಿವೆ. ಈ ಯೋಜನೆಯಿಂದ ಯಾವ ಜನರನ್ನು ಹೊರಗಿಡಲಾಗುತ್ತಿದೆ ಎಂಬುದನ್ನು ಕೆಳಗೆ ನೀಡಲಾದ ಅಂಶಗಳಲ್ಲಿ ತಿಳಿಯಿರಿ:

ಮಾಸಿಕ ಆದಾಯ 10,000 ರೂ.ಗಿಂತ ಹೆಚ್ಚಿರುವವರಿಗೆ ಇನ್ನು ಮುಂದೆ ಉಚಿತ ಪಡಿತರ ಸಿಗುವುದಿಲ್ಲ.
5 ಎಕರೆಗಿಂತ ಹೆಚ್ಚು ಕೃಷಿ ಭೂಮಿ ಹೊಂದಿರುವವರ ಹೆಸರನ್ನು ಫಲಾನುಭವಿ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ.
ನಗರ ಪ್ರದೇಶಗಳಲ್ಲಿ 1,000 ಚದರ ಅಡಿಗಿಂತ ದೊಡ್ಡ ಮನೆಗಳನ್ನು ಹೊಂದಿರುವವರಿಗೂ ಈ ಸೌಲಭ್ಯ ಸಿಗುವುದಿಲ್ಲ.
ಸರ್ಕಾರಿ ನೌಕರರನ್ನು ಹೊಂದಿರುವ ಕುಟುಂಬಗಳು ಇನ್ನು ಮುಂದೆ ಉಚಿತ ಪಡಿತರಕ್ಕೆ ಅರ್ಹರಾಗಿರುವುದಿಲ್ಲ.
ವಾರ್ಷಿಕ ಆದಾಯ 1.5 ಲಕ್ಷ ರೂ.ಗಿಂತ ಹೆಚ್ಚಿರುವವರು ಈಗ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ.

ಹೊಸ ನಿಯಮಗಳ ಉದ್ದೇಶ ಮತ್ತು ಪ್ರಯೋಜನಗಳು

ಸರ್ಕಾರ ಈ ಬದಲಾವಣೆಗಳನ್ನು ಏಕೆ ಮಾಡಿತು? ಇದಕ್ಕೆ ಪ್ರಮುಖ ಕಾರಣವೆಂದರೆ ಉಚಿತ ಪಡಿತರ ಪ್ರಯೋಜನಗಳು ಸರಿಯಾದ ಜನರನ್ನು ತಲುಪುತ್ತವೆ. ಇದನ್ನು ಹೊರತುಪಡಿಸಿ:

ಸಬ್ಸಿಡಿಯ ಸರಿಯಾದ ವಿತರಣೆಯನ್ನು ಖಚಿತಪಡಿಸಿಕೊಳ್ಳಲಾಗುತ್ತದೆ.
ವಂಚನೆ ಮತ್ತು ಸುಳ್ಳು ಹಕ್ಕು ಸ್ಥಾಪನೆಗಳನ್ನು ನಿಷೇಧಿಸಬೇಕು.
ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿರುವವರು ಸ್ವಾವಲಂಬಿಗಳಾಗಬೇಕು.
ಸರ್ಕಾರಿ ಸಂಪನ್ಮೂಲಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು.
ಯೋಜನೆಯ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಹೆಚ್ಚಾಗಬೇಕು.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಫಲಾನುಭವಿಗಳನ್ನು ಸರಿಯಾಗಿ ಗುರುತಿಸಬೇಕು.

ಇವರ ಪಡಿತರ ಚೀಟಿ ರದ್ದು

ಯಾರ ಮಾಸಿಕ ಆದಾಯ ರೂ 10,000 ಕ್ಕಿಂತ ಹೆಚ್ಚು.
5 ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರು.
ಪಕ್ಕಾ ಮನೆ ಅಥವಾ 1,000 ಚದರ ಅಡಿಗಿಂತ ದೊಡ್ಡ ಮನೆ ಹೊಂದಿರುವವರು.
ಸರ್ಕಾರಿ ನೌಕರರಿರುವ ಕುಟುಂಬಗಳು.
ವಾರ್ಷಿಕ ಆದಾಯ 1.5 ಲಕ್ಷ ರೂ.ಗಿಂತ ಹೆಚ್ಚಿದ್ದರೆ.
2 ಹೆಕ್ಟೇರ್‌ಗಿಂತ ಹೆಚ್ಚು ನೀರಾವರಿ ಭೂಮಿ ಹೊಂದಿರುವವರು.

ಉಚಿತ ಪಡಿತರ ಯೋಜನೆಯ ಲಾಭ ಪಡೆಯುವುದು ಹೇಗೆ?
ಮೊದಲು, ನಿಮ್ಮ ಪಡಿತರ ಚೀಟಿಯ ಸಿಂಧುತ್ವವನ್ನು ಪರಿಶೀಲಿಸಿ.
ನಿಮ್ಮ ಎಲ್ಲಾ ದಾಖಲೆಗಳನ್ನು ನವೀಕರಿಸಿ - ಆಧಾರ್, ಆದಾಯ ಪ್ರಮಾಣಪತ್ರ, ಭೂ ಪತ್ರಗಳು ಮುಂತಾದವು.
ಅರ್ಹತೆ ಇದ್ದರೆ, ಹತ್ತಿರದ ಪಿಡಿಎಸ್ ಕೇಂದ್ರಕ್ಕೆ ಹೋಗಿ ಪಡಿತರ ಪಡೆಯಿರಿ.
ಪ್ರತಿ ವರ್ಷ ನಿಮ್ಮ ಮಾಹಿತಿಯನ್ನು ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಪರಿಶೀಲಿಸಿ.
ಅನರ್ಹರಾಗಿದ್ದರೆ, ಪ್ರಯೋಜನಗಳು ಸ್ವಯಂಚಾಲಿತವಾಗಿ ನಿಲ್ಲುತ್ತವೆ.

ಅರ್ಜಿ ಪ್ರಕ್ರಿಯೆಯ ಬದಲಾವಣೆಗಳು
2025 ರಿಂದ ಅರ್ಜಿ ಪ್ರಕ್ರಿಯೆಯು ಸಂಪೂರ್ಣವಾಗಿ ಡಿಜಿಟಲ್ ಆಗಿರುತ್ತದೆ:
ಹೊಸ ಪಡಿತರ ಚೀಟಿ ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಎಲ್ಲಾ ದಾಖಲೆಗಳನ್ನು ಡಿಜಿಟಲ್ ಸ್ವರೂಪದಲ್ಲಿ ಅಪ್‌ಲೋಡ್ ಮಾಡಬೇಕು.
ಆಧಾರ್ ಆಧಾರಿತ ಪರಿಶೀಲನೆ ಅಗತ್ಯವಾಗುತ್ತದೆ.
ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಬಹುದು.
ರಾಜ್ಯ ಬದಲಾದರೂ ಪಡಿತರ ಚೀಟಿ ವರ್ಗಾವಣೆ ಆನ್‌ಲೈನ್‌ನಲ್ಲಿಯೇ ನಡೆಯಲಿದೆ.
ಅನರ್ಹವೆಂದು ಕಂಡುಬಂದರೆ, ಕಾರ್ಡ್ ಸ್ವಯಂಚಾಲಿತವಾಗಿ ಅಳಿಸಲ್ಪಡುತ್ತದೆ.
ಉಚಿತ ಪಡಿತರ ಯೋಜನೆಯ ವಿತರಣಾ ಪ್ರಕ್ರಿಯೆ

ಪಡಿತರವನ್ನು ಪಿಡಿಎಸ್ ಕೇಂದ್ರದ ಮೂಲಕ ವಿತರಿಸಲಾಗುವುದು.

ಪ್ರತಿ ತಿಂಗಳು ಗೋಧಿ, ಅಕ್ಕಿ, ಬೇಳೆಕಾಳುಗಳು ಇತ್ಯಾದಿಗಳನ್ನು ನಿಗದಿತ ಪ್ರಮಾಣದಲ್ಲಿ ನೀಡಲಾಗುವುದು.
ಫಲಾನುಭವಿಯು ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ತೋರಿಸುವುದು ಕಡ್ಡಾಯವಾಗಿದೆ.
ವಿತರಣೆಯನ್ನು ಸಂಪೂರ್ಣವಾಗಿ ಡಿಜಿಟಲ್ ದಾಖಲೆಗಳೊಂದಿಗೆ ಮಾಡಲಾಗುತ್ತದೆ.

ಗ್ಯಾರಂಟಿ ಯೋಜನೆ ಫಲಾನುಭವಿಗಳನ್ನು ಕಡಿಮೆ ಮಾಡಲು 20 ಲಕ್ಷ ರೇಷನ್ ಕಾರ್ಡ್ ರದ್ದು,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ-Cancelled suspended ration card list 

“ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.”
ಸಿದ್ದರಾಮಯ್ಯ, ಮುಖ್ಯಮಂತ್ರಿಗಳು

ಕಳೆದ ಜುಲೈ 8ರಂದು ವಿಧಾನಸೌಧದಲ್ಲಿ ರಾಜ್ಯದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸುವಂತೆ ಖಡಕ್ ಸೂಚನೆ ನೀಡಿದ್ದರು.


ರಾಜ್ಯದಲ್ಲಿ ಶೇ 80ರಷ್ಟು (1.27) ಬಿಪಿಎಲ್ ಕುಟುಂಬಗಳಿದ್ದು, 4.37 ಕೋಟಿ ಜನರು ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆಯುತ್ತಿದ್ದಾರೆ. ಹೊಸ ಕಾರ್ಡ್‌ಳಿಗೆ ಸಲ್ಲಿಕೆಯಾದ 2.95 ಲಕ್ಷ ಅರ್ಜಿಗಳು ವಿಲೇವಾರಿಗೆ ಬಾಕಿ ಇದ್ದು, ಅನರ್ಹ ಕಾರ್ಡ್ ರದ್ದುಗೊಳಿಸಿ ಅವುಗಳ ಬದಲಾಗಿ ಬಾಕಿ ಇರುವ ಅರ್ಜಿಗಳನ್ನು ಇತ್ಯರ್ಥ ಮಾಡುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಜಿಲ್ಲಾಧಿಕಾರಿಗಳು ಕಳೆದ ಆರು ತಿಂಗಳಲ್ಲಿ ಒಮ್ಮೆಯೂ ಪಡಿತರ ಪಡೆಯದ ಕುಟುಂಬಗಳನ್ನು ಪತ್ತೆ ಹಚ್ಚುವಂತೆ ಆಹಾರ ಮತು ನಾಗರಿಕ ಪೂರೈಕೆ ಇಲಾಖೆಗೆ ನಿರ್ದೇಶನ ನೀಡಿದ್ದು,20 ಲಕ್ಷಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾಗಿದೆ.

ಅನರ್ಹ ಪಟ್ಚಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಈ ತಿಂಗಳಿನಿಂದ ಅನ್ನಭಾಗ್ಯ ಹಾಗೂ ಗೃಹಲಕ್ಷ್ನಿ ಹಣ ಸಿಗುವುದಿಲ್ಲ

]]>
Sun, 18 May 2025 17:41:11 +0530 shivuagrico
Gruhajyothi&ಗೃಹಜ್ಯೋತಿ ಫಲಾನುಭವಿಗಳಿಗೆ ಸಿಹಿಸುದ್ದಿ,ಶೇಕಡಾ 10ರಷ್ಟು ಹೆಚ್ಚುವರಿ ಉಚಿತ ವಿದ್ಯುತ್ ಬಳಕೆಗೆ ಸರ್ಕಾರ ಆದೇಶ https://krushirushi.in/Gruhajyothi-2101 https://krushirushi.in/Gruhajyothi-2101 Gruhajyothi-ಗೃಹಜ್ಯೋತಿ ಫಲಾನುಭವಿಗಳಿಗೆ ಸಿಹಿಸುದ್ದಿ,ಶೇಕಡಾ 10ರಷ್ಟು ಹೆಚ್ಚುವರಿ ಉಚಿತ ವಿದ್ಯುತ್ ಬಳಕೆಗೆ ಸರ್ಕಾರ ಆದೇಶ

ಗೃ ಹಜ್ಯೋತಿ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗೆ ಬಳಕೆಯ ಮಿತಿಯಲ್ಲಿ ಪ್ರತಿ ಗೃಹಬಳಕೆ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ(ಆರ್ಥಿಕ ವರ್ಷ 2022-23 ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್‌ಗಳ ಬಳಕೆ ಮೀರಿದ ಗ್ರಾಹಕರು ಪೂರ್ಣ ವಿದ್ಯುತ್‌ ಬಿಲ್ಲನ್ನು ಪಾವತಿಸಲು ಸರ್ಕಾರ ಆದೇಶಿಸಿದೆ. 


ಈ ಯೋಜನೆಯಡಿ ಗ್ರಾಹಕರು https://sevasindhugs.Karnataka.gov.in/ ನೋಂದಾಯಿಸಿಕೊಳ್ಳಬೇಕು. 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಸಂಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಬೇಕು.ಉದಾಹರಣೆ: 20 ಯೂನಿಟ್ ವಿದ್ಯುತ್ ಬಳಕೆ ಮಾಡುವ ಗ್ರಾಹಕರು ಮಂಜೂರಾದ ಲೋಡ್‌ಗಿಂತ ಅಧಿಕ ವಿದ್ಯುತ್‌ ಬಳಕೆ ಮಾಡಿದಲ್ಲಿ ಜೆಸ್ಕಾಂನಿಂದ ನಿಯಮಾನುಸಾರ ದಂಡ ವಿಧಿಸಲಾಗುವುದು. 


ಆದ್ದರಿಂದ ಗ್ರಾಹಕರು ಹೆಚ್ಚಿನ ಲೋಡ್ ಅನ್ನು ಸಕ್ರಮಗೊಳಿಸಲು ಸಂಬಂಧಪಟ್ಟ ಜೆಸ್ಕಾಂ ಉಪ ವಿಭಾಗ ಕಚೇರಿಗಳಲ್ಲಿ ನೋಂದಾಯಿಸಿಕೊಳ್ಳಬೇಕು.

ಇದನ್ನೂ ಓದಿ

Gruhajyothi delink-ಮನೆ ಬದಲಾವಣೆ ಮಾಡಿದರೆ ಹಳೆ ಆರ್ ಆರ್ ನಂಬರ್ ಡಿಲಿಂಕ್ ಮಾಡಿ ಹೊಸ ಗೃಹಜ್ಯೋತಿ ಅರ್ಜಿ ಹಾಕುವ ಡೈರೆಕ್ಟ್ ಲಿಂಕ್ - https://krushirushi.in/Gruhajyothi-delink-1898 

Free electricity:ಕಳೆದ 12 ತಿಂಗಳ ಬಳಸಿದ ವಿದ್ಯುತ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://hescom.karnataka.gov.in/ 

ಮುಖಪುಟದಲ್ಲಿರುವ ಆನ್ಲೈನ್ ಸೇವೆಗಳು ಕೆಳಗಡೆ ಆನ್ಲೈನ್ ವಿದ್ಯುತ್ ಬಿಲ್ ಪಾವತಿ ಮೇಲೆ ಕ್ಲಿಕ್ ಮಾಡಿ

ನಂತರ ಪಟ್ಟಣದ ಗ್ರಾಹಕರಾಗಿದ್ದರೆ ಆನ್ಲೈನ್ ವಿದ್ಯುತ್ ಬಿಲ್ ಪಾವತಿಗಾಗಿ ಇಲ್ಲಿ ಕ್ಲಿಕ್ ಮಾಡಿ(RAPDRP ಪಟ್ಟಣಗಳು) Select ಮಾಡಿ

ಗ್ರಾಮಾಂತರ ಗ್ರಾಹಕರಾಗಿದ್ದರೆ Non RAPDRP ಪಟ್ಟಣಗಳು ಮೇಲೆ ಕ್ಲಿಕ್ ಮಾಡಿ

ನಂತರ ಮೊದಲ ಬಾರಿ Register ಮಾಡುತ್ತಿದ್ದರೆ,click here to register ಮೇಲೆ ಕ್ಲಿಕ್ ಮಾಡಿ, ನಿಮ್ಮ ಇಮೇಲ್ ಐಡಿ, ಮೊಬೈಲ್ ನಂಬರ್ ಹಾಕಿ

ನಂತರ Use E-Mail address as user ID ಮೇಲೆ ಕ್ಲಿಕ್ ಮಾಡಿ, ನಿಮಗೆ ಬೇಕಾದ password create ಮಾಡಿ,Confirm password ಹಾಕಿ

ನಂತರ ನಿಮ್ಮ ಪಿನ್ ಕೊಡ್,ಜನ್ಮ ದಿನಾಂಕ,Security question select ಮಾಡಿ ಉತ್ತರವನ್ನು ಹಾಕಿ

ನಂತರ "I have read and agree to the terms and conditions" select ಮಾಡಿ,Register ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ "You have successfully registered" ಎಂಬ ಸಂದೇಶ ಕಾಣೆಸುತ್ತದೆ

ನಂತರ ನಿಮ್ಮ ಇ-ಮೇಲ್ ಐಡಿ ಹಾಗೂ create ಮಾಡಿದ password ಹಾಕಿ login ಮಾಡಿ

ನಂತರ My account ಕೆಳಗಡೆ Consumption calculator  ಮೇಲೆ ಕ್ಲಿಕ್ ಮಾಡಿ, From July-222 ರಿಂದ June-2023 ರವರೆಗೆ Select ಮಾಡಿ,Calculate usage ಮೇಲೆ ಕ್ಲಿಕ್ ಮಾಡಿ

 ನಂತರ Print view data ಮೇಲೆ ಕ್ಲಿಕ್ ಮಾಡಿದರೆ ನೀವು ಇಲ್ಲಿಯವರೆಗೂ ಬಳಸಿದ ವಿದ್ಯುತ್ ಹಾಗೂ ಕಟ್ಟಿದ ವಿದ್ಯುತ್ ಬಿಲ್ ನ ಮಾಹಿತಿ ದೊರೆಯಲಿದೆ.

ಸೂಚನೆ- ಇದರಲ್ಲಿ ಕಳೆದ 12 ತಿಂಗಳ (ಅಂದರೆ ಜುಲೈ-2022 ರಿಂದ ಜೂನ್-2023) ಬಿಲ್ ನ ಸರಾಸರಿ ಬಿಲ್ ಮೊತ್ತದ ಮೇಲೆ ಹೆಚ್ಚುವರಿ 10 ಯುನಿಟ್ ಉಚಿತವಾಗಿ ನೀಡಲಾಗುತ್ತದೆ.

]]>
Sun, 18 May 2025 05:54:05 +0530 shivuagrico
Karnataka rains&ಶನಿವಾರ,ಭಾನುವಾರ,ಸೋಮವಾರ ಈ 3 ದಿನ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ https://krushirushi.in/Karnataka-rains-2100 https://krushirushi.in/Karnataka-rains-2100 Karnataka rains-ಶನಿವಾರ,ಭಾನುವಾರ,ಸೋಮವಾರ ಈ 3 ದಿನ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ

ಹಲವೆಡೆ ಭಾರಿ ಮಳೆ ಸಾಧ್ಯತೆ 
ಬೆಂಗಳೂರು: ರಾಜ್ಯದಾದ್ಯಂತ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೊ ಅಲರ್ಟ್ ಘೋಷಿಸಿದೆ. 

ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಯ ಹಲವೆಡೆ ಶನಿವಾರ, ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ತಿಳಿಸಿದೆ. 

ಬೆಂಗಳೂರು ನಗರ ಮತ್ತು ಗ್ರಾಮೀಣ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಗಾಳಿಯೊಂದಿಗೆ (40-50 ಕಿ.ಮೀ ) ಗುಡುಗು ಸಹಿತ ಮಳೆಯಾಗುವ ಸಂಭವ ಇದೆ.

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ತೀರ ಭಾಗಗಳಲ್ಲಿ ಅಲ್ಲಲ್ಲಿ ಮುಂಗಾರು ರೀತಿಯ ಮಳೆಯಾಗುತ್ತಿದ್ದು, ಮಧ್ಯಾಹ್ನ ನಂತರ, ಸಂಜೆ, ರಾತ್ರಿ ವೇಳೆ ಇತರ ಭಾಗಗಳಲ್ಲಿಯೂ ಗುಡುಗು ಸಹಿತ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. 

ಈಗಿನಂತೆ ಮುಂಗಾರು ರೀತಿಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿಅ ಸಂಜೆ, ರಾತ್ರಿ ಗುಡುಗು, ಸಿಡಿಲು ಸಹಿತ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಮೇ 17ರಂದು ಸ್ವಲ್ಪ ಮಟ್ಟಿಗೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾದರೂ ಮೇ 19ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ. 

 *ಮೇ 20ರ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಲಕ್ಷಣಗಳಿದ್ದು ಇದರಿಂದ ಮುಂಗಾರು ಆಗಮನ ವೇಗ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಮೇ 19ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ನಿರೀಕ್ಷೆ ಇದೆ.*

ರಾಜ್ಯದಲ್ಲಿ ಐದು ದಿನಗಳವರೆಗಿನ ಮಳೆ ಮುನ್ಸೂಚನೆಯನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ ಡಿಎಂಸಿ) ಬಿಡುಗಡೆ ಮಾಡಿದೆ. ಹವಾಮಾನ ಇಲಾಖೆಯು ನೀಡಿರುವ ಮಾಹಿತಿಯಡಿ ಸಿದ್ಧಪಡಿಸಲಾಗಿರುವ ಈ ಪ್ರಕಟಣೆಯಲ್ಲಿ ಮಾ. 15ರಿಂದ 19ರವರೆಗಿನ ಅವಧಿಯಲ್ಲಿ ಕರ್ನಾಟಕದ ಯಾವ ಭಾಗದಲ್ಲಿ ಮಳೆಯಾಗಲಿದೆ ಎಂಬುದರ ಸಂಕ್ಷಿಪ್ತ ವಿವರಣೆಯನ್ನು ನೀಡಲಾಗಿದೆ.

ಪ್ರಕಟಣೆಯಲ್ಲಿ, “ರಾಜ್ಯದಾದ್ಯಂತ ಒಣ ಹವೆಯಿರುವ ಸಾದ್ಯತೆಯಿದ್ದು, ಮಾರ್ಚ್ 16 ಮತ್ತು 17 ರಂದು ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಸಾಧಾರಣ ಮಳೆ, ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಹೆಚ್ಚಾಗಿರೋ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ’’ ಎಂದು ತಿಳಿಸಲಾಗಿದೆ.

ಹಾಗಾದರೆ ಎಲ್ಲೆಲ್ಲಿ ಮಳೆ?

ಪ್ರಕಟಣೆಯೊಂದಿಗೆ, ಮಳೆ ಬೀಳಬಹುದಾದ ಪ್ರದೇಶಗಳ ಜಿಲ್ಲಾವಾರು ಮ್ಯಾಪ್ ಬಿಡುಗಡೆ ಮಾಡಿರುವ ಕೆಎಸ್ಎನ್ ಡಿಎಂಸಿ, ಎಲ್ಲೆಲ್ಲಿ ಮಳೆ ಬೀಳಬಹುದು, ಉಷ್ಣಾಂಶ ಎಷ್ಟಿರಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದೆ. ಅದರಲ್ಲಿರುವಂತೆ, ಮಾ. 15 - 16ರ ನಡುವೆ, ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಸುಮಾರು 2.5 ಮಿ.ಮೀ.ನಿಂದ 7.5 ಮಿ.ಮೀ.ವರೆಗೆ ಮಳೆ ಸುರಿಯುವ ಸಾಧ್ಯತೆಗಳಿವೆ. ಇನ್ನು, ಹಾಸನ ಜಿಲ್ಲೆಯ ಪಶ್ಚಿಮ ಭಾಗ, ದಕ್ಷಿಣ ಕನ್ನಡ ಜಿಲ್ಲೆಯ ಪೂರ್ವ ಭಾಗ, ಚಿಕ್ಕಮಗಳೂರು ಜಿಲ್ಲೆಯ ದಕ್ಷಿಣ ಭಾಗಗಳಲ್ಲಿ ಶಿವಮೊಗ್ಗ ಜಿಲ್ಲೆಯ ಪೂರ್ವ, ಮಧ್ಯ ಹಾಗೂ ದಕ್ಷಿಣ ಭಾಗಗಳಲ್ಲಿ ಮಳೆಯಾಗಲಿದೆ. ಸೆ. 17-18ರಂದು ಹಾಸನದ ನೈಋತ್ಯ ದಿಕ್ಕಿನಲ್ಲಿ, ಹಾಸನ - ದಕ್ಷಿಣ ಕನ್ನಡದ ಗಡಿಭಾಗದ ಕೆಲವು ಹಳ್ಳಿಗಳಲ್ಲಿ ಮಳೆಯಾಗುತ್ತದೆ. ಅಲ್ಲಿ ಬಿಟ್ಟರೆ ಮತ್ತೆಲ್ಲೂ ಮಳೆಯಾಗುವುದಿಲ್ಲ. ಮಾ. 18-19ರವರೆಗೂ ಎಲ್ಲೂ ಮಳೆಯಾಗುವುದಿಲ್ಲ.

ಉಷ್ಣಾಂಶ ಹೇಗೆ?

ಮಾ. 15 - 16ರಂದು ರಾಜ್ಯಾದ್ಯಂತ ಉಷ್ಣಾಂಶ ಸಾಧಾರಣ ಮಟ್ಟದಲ್ಲಿರುತ್ತದೆ. ಕರಾವಳಿಯಲ್ಲಿ 32ರಿಂದ 34 ಡಿಗ್ರಿ ವರೆಗೆ ಬಿಸಿ ಏರಬಹುದು. ಉತ್ತರ ಕರ್ನಾಟಕದ ಅದರಲ್ಲೂ ವಿಶೇಷವಾಗಿ ಹೈದರಾಬಾದ್ ಕರ್ನಾಟಕದಲ್ಲಿ 36 ಡಿಗ್ರಿಯಿಂದ 40 ಡಿಗ್ರಿ ತಾಪಮಾನ ಇರಲಿದೆ. ಮಧ್ಯ ಕರ್ನಾಟಕದಲ್ಲಿ ಉತ್ತರದ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯನಗರ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ, 34ರಿಂದ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಮೈಸೂರು, ಬೆಂಗಳೂರು, ಬೆಂಗೆಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯದಲ್ಲಿ 34ರಿಂದ 36 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ. ಚಾಮರಾಜನಗರದಲ್ಲಿ 32ರಿಂದ 34 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಲಾಗಿದೆ.

]]>
Sat, 17 May 2025 19:45:36 +0530 shivuagrico
FID&ಸರ್ಕಾರದ ಸಬ್ಸಿಡಿ ಸವಲತ್ತು,ಬೆಳೆಸಾಲ ಹಾಗೂ ಬೆಳೆವಿಮೆಗೆ ಎಫ್ ಐಡಿ ಕಡ್ಡಾಯ,ಆಧಾರ್ ನಂಬರ್ ಹಾಕಿ ನಿಮ್ಮ FID  ತಿಳಿದುಕೊಳ್ಳಿ https://krushirushi.in/FID-2099 https://krushirushi.in/FID-2099 FID-ಸರ್ಕಾರದ ಸಬ್ಸಿಡಿ ಸವಲತ್ತು,ಬೆಳೆಸಾಲ ಹಾಗೂ ಬೆಳೆವಿಮೆಗೆ ಎಫ್ ಐಡಿ ಕಡ್ಡಾಯ,ಆಧಾರ್ ನಂಬರ್ ಹಾಕಿ ನಿಮ್ಮ FID  ತಿಳಿದುಕೊಳ್ಳಿ

ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.

 ಏನಿದು ಫ್ರೂಟ್ಸ್ ನಂಬರ್


 ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.



ನಿಮ್ಮ FID ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx 

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.

FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

 ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್‍ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.

 ಏಕೆ ನೋಂದಾಯಿಸಬೇಕು?


 ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್  ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ


ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.

ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು

]]>
Sat, 17 May 2025 06:13:51 +0530 shivuagrico
Kruthika male nakshatra&ಮೇ 24 ರವರೆಗೆ ಕೃತಿಕಾ ಮಳೆ,ಕೃತಿಕಾ ಮಳೆ ಕಿರುಬನ ಹಿಡಿದಂತೆ https://krushirushi.in/Kruthika-male-nakshatra-2098 https://krushirushi.in/Kruthika-male-nakshatra-2098 Male nakshatragalu-2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು


2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-14-4-2025

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-28-4-2025

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

Kruthika male nakshatra-ಮೇ 24 ರವರೆಗೆ ಕೃತಿಕಾ ಮಳೆ,ಕೃತಿಕಾ ಮಳೆ ಕಿರುಬನ ಹಿಡಿದಂತೆ

ದಿನಾಂಕ-11-5-2025 ರಿಂದ 24.05.2025

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-25-5-2025

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-6-7-2025

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-20-7-2025

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-31-8-2025

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2025

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-27-9-2025

ಉತ್ತಮ ಮಳೆ

14.ಚಿತ್ತ

ದಿನಾಂಕ-11-10-2025

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-24-10-2025

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2025

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs  ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in  website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.     

https://krushirushi.in/contact-us


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ

]]>
Fri, 16 May 2025 20:02:54 +0530 shivuagrico
Karnataka rains&ಮೇ 21 ರವರೆಗಿನ ಜಿಲ್ಲಾವಾರು ಮಳೆ ಮಾಹಿತಿ https://krushirushi.in/Karnataka-rains-2097 https://krushirushi.in/Karnataka-rains-2097 Karnataka rains-ಮೇ 21 ರವರೆಗಿನ ಜಿಲ್ಲಾವಾರು ಮಳೆ ಮಾಹಿತಿ

ಮೇ 16ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Karnataka Rains) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 3 ದಿನಗಳ ಕಾಲ ಕರಾವಳಿ ಕರ್ನಾಟಕದಾದ್ಯಂತ ಮಳೆ ಹೆಚ್ಚಾಗಲಿದ್ದು, ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ಇಳಿಕೆಯ ಪ್ರವೃತ್ತಿಯೊಂದಿಗೆ ದೊಡ್ಡ ಬದಲಾವಣೆಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಂಜೆ ವೇಳೆಗೆ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31°C ಮತ್ತು 20°C ಇರುವ ಸಾಧ್ಯತೆ ಇದೆ.

ಮೇ 17ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ.

ಮೇ 18ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ.

ಮೇ 19ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೀದರ್‌, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 20 ಮತ್ತು 21ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

]]>
Fri, 16 May 2025 05:51:25 +0530 shivuagrico
ಉಚಿತ ಊಟ ವಸತಿಯೊಂದಿಗೆ 13 ದಿನಗಳ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ&Free dairy and vermicompost training https://krushirushi.in/Free-dairy-and-vermicompost-training-2096 https://krushirushi.in/Free-dairy-and-vermicompost-training-2096 ಉಚಿತ ಊಟ ವಸತಿಯೊಂದಿಗೆ 13 ದಿನಗಳ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ-Free dairy and vermicompost training

ತರಭೇತಿ ಸ್ಥಳ

ರುಡ್‌ಸೆಟ್ ಸಂಸ್ಥೆ, ಧಾರವಾಡ 
Rural Development & Self Employment Training Institute, (RUDSET Institute) 
ಗಾಂಧಿನಗರ, ಧಾರವಾಡ-580 004 
Sponsors: SDME Trust & Canara Bank 
Phone: 9008448518 
ಉಚಿತ 13 ದಿನಗಳ 
ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ 


ಡಾ. ಡಿ. ವೀರೇಂದ್ರ ಹೆಗ್ಗಡೆ 
ಅಧ್ಯಕ್ಷರು, ರುಡ್‌ಸೆಟ್ ಸಂಸ್ಥೆಗಳು, ಧರ್ಮಸ್ಥಳ 

ತರಭೇತಿ ದಿನಾಂಕ
25-05-2025 80 06.06.2025 


ತರಬೇತಿಗೆ ಸೇರಬಯಸುವವರು 
1. ಅಭ್ಯರ್ಥಿಯು ಗ್ರಾಮೀಣ ಭಾಗದ ಬಿಪಿಎಲ್ ಅಥವಾ ಅಂತ್ಯೋದಯ ಕಾರ್ಡ ಹೊಂದಿರಬೇಕು ಅಥವಾ ಎನ್‌ಆರ್‌ಇಜಿ ಕಾರ್ಡ ಹೊಂದಿರಬೇಕು. 
2. 19 ರಿಂದ 45 ವಯಸ್ಸಿನ ಒಳಗಿರಬೇಕು. 
3. ಈ ತರಬೇತಿ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದೆ. 
ಹೆಸರು ನೋಂದಾಯಿಸಲು ಈ ಮೋಬೈಲ್ ನಂಬರ್ ಗೆ ಫೋನ್ ಮಾಡಿ 
9008448518 & 9743186978 
ಫೋನ್ ಮಾಡುವ ಸಮಯ ಮುಂಜಾನೆ 10 ರಿಂದ ಸಂಜೆ 6 ರ ವರೆಗೆ

ತರಬೇತಿಯಲ್ಲಿ ಕಲಿಸುವ ವಿಷಯಗಳು:: 
1. ಹೈನುರಾಸುಗಳ ತಳಿಗಳು (Dairy breeds)
2. ರೋಗಗಳು ಮತ್ತು ಅದರ ಲಕ್ಷಣಗಳು(Disease and their symptoms)
3. ರೋಗಗಳನ್ನು ತಡೆಗಟ್ಟುವ ಕ್ರಮಗಳು(controlling measures)
4. ಕೃತಕ ಗರ್ಭಧಾರಣೆ (Artificial Insemination)
5. ಮೇವಿನ ವಿಷಯಗಳು(Fodder)
6. ಎರೆಹುಳು ಗೊಬ್ಬರ ತಯಾರಿಕೆ (Vermicompost)
7. ಎರೆಹುಳು ನಿರ್ವಹಣೆ(Vermicompost management)
8. ಸಾವಯುವ ಕೃಷಿ ಪದ್ಧತಿಯ ಅರಿವು (Importantance of organic farming)
9. ಸಮಯದ ನಿರ್ವಹಣೆ, ಸ್ವ ಉದ್ಯೋಗದ ಮಹತ್ವ, ಸಂವಹನ ಕೌಶಲ್ಯ, ಬ್ಯಾಂಕಿಂಗ್ ವಿಷಯ ಮತ್ತು ಇನ್ನೂ ಇತರೆ ವಿಷಯಗಳ ಬಗ್ಗೆ ತಿಳುವಳಿಕೆ ನೀಡಲಾಗುವುದು.(Bank and subsidy schemes) ಇನ್ನು ಇತರೆ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು 

Free bike repair training-ಉಚಿತ ಊಟ ವಸತಿಯೊಂದಿಗೆ ಬೈಕ್ ರಿಪೇರಿ ತರಬೇತಿ

Free CCTV Installation and repair training-ಉಚಿತ ಊಟ ವಸತಿಯೊಂದಿಗೆ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿ

Free mobile repair training-ಉಚಿತ ಊಟ ವಸತಿಯೊಂದಿಗೆ 1 ತಿಂಗಳ ಮೊಬೈಲ್ ರಿಪೇರಿ ತರಭೇತಿ

ಇದೇ ರೀತಿ ಬೇರೆ ಜಿಲ್ಲೆಗಳಲ್ಲೂ ಲೀಡ್ ಬ್ಯಾಂಕ್ ವತಿಯಿಂದ ತರಭೇತಿಗಳು ನಡೆಯುತ್ತವೆ,ಹೆಚ್ಚಿನ ಮಾಹಿತಿಗಾಗಿ ನಿಮ್ಮ ಜಿಲ್ಲೆಯ ಲೀಡ್ ಬ್ಯಾಂಕ್ ಸಂಪರ್ಕಿಸಿ


Free tailoring training-ಉಚಿತ ಊಟ ವಸತಿಯೊಂದಿಗೆ ಹೊಲಿಗೆ ಯಂತ್ರ ತರಭೇತಿ


ಉಚಿತ ಉಚಿತ ಉಚಿತ
*ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ ಮಹಿಳೆಯರ ಉಚಿತ ಹೊಲಿಗೆ ತರಬೇತಿಯನ್ನು ದಿನಾಂಕ 2.6.2025 ರಿಂದ 2.7.2025  ರ ವರೆಗೆ 31 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ* 

ಹಾವೇರಿ ಜಿಲ್ಲೆಯ  ಗ್ರಾಮೀಣ ಭಾಗದ BPL ರೇಷನ್ ಕಾರ್ಡ ಹೊಂದಿದ 18-45 ವಯಸ್ಸಿನ ನಿರುದ್ಯೋಗಿ ಯುವತಿಯರಿಗೆ ಅವಕಾಶವಿದೆ.
 *ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ.*
ತರಬೇತಿಯಲ್ಲಿ ಕಲಿಸುವ ವಿಷಯಗಳು 
ಕಟೋರಿ ಬ್ಲೌಸ್
ಪ್ರಿನ್ಸೆಸ್ ಕಟ್ ಬ್ಲೌಸ್ 
ಬೋಟ್ ನೆಕ್ ಬ್ಲೌಸ್ 
ಸಾದಾ ಬ್ಲೌಸ್
ಹೈ ನೆಕ್ ಬ್ಲೌಸ್
V ನೆಕ್ ಬ್ಲೌಸ್ 
ಫುಲ್ ಸ್ಲೀವ್ ಬ್ಲೌಸ್ ಹೊಲಿಯುವುದು 
ಚೂಡಿದಾರ್ ಹೊಲಿಯುವುದು 
ಸಣ್ಣ ಮಕ್ಕಳ ಬಟ್ಟೆ ಹೊಲಿಯುವುದು 
ಯೂನಿಫಾರ್ಮ್
ಲಾಂಗ್ ಗೌನ್ ಹೊಲಿಯುವುದು
ಕ್ರಾಪ್ ಟಾಪ್ ಹೊಲಿಯುವುದು
ನೈಟ್ ಡ್ರೆಸ್ ಹೊಲಿಯುವುದು
ಮುಂತಾದವುಗಳನ್ನು ಉಚಿತವಾಗಿ ಕಲಿಸುತ್ತೇವೆ..

ತಮ್ಮ ಹೆಸರನ್ನು ಫೋನ್ ಮೂಲಕ ನೋಂದಾಯಿಸಿಕೊಳ್ಳಲು *8660219375* ನಂಬರ್ ಗೆ ಕಾಲ್ ಮಾಡಿ.

]]>
Thu, 15 May 2025 12:24:11 +0530 shivuagrico
ಹಿಂಗಾರು ಮಳೆಯಿಂದಾದ ಬೆಳೆ ಹಾನಿಗೆ ಪರಿಹಾರ, ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಬೆಳೆಪರಿಹಾರ&Bele parihara list https://krushirushi.in/Bele-parihara-list-2095 https://krushirushi.in/Bele-parihara-list-2095 ಹಿಂಗಾರು ಮಳೆಯಿಂದಾದ ಬೆಳೆ ಹಾನಿಗೆ ವಾರದೊಳಗೆ ಪರಿಹಾರ, ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಬೆಳೆಪರಿಹಾರ-Bele parihara list

ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟೇ‌ರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ₹120 ಕೋಟಿವರೆಗೆ ನಷ್ಟ ಆಗಿರಬಹುದು ಎ೦ದು ಅ೦ದಾಜಿಸಲಾಗಿದೆ. ಬೆಳೆ ಹಾನಿಯಾದ ರೈತರ ಬ್ಯಾಂಕ್‌ ಖಾತೆಗಳಿಗೆ ವಾರದೊಳಗೆ ಪರಿಹಾರ ಹಣ ಜಮೆಯಾಗಲಿದೆ''


ಬೆಳೆಹಾನಿ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service87/

ನಂತರ ನಿಮ್ಮ ಜಿಲ್ಲೆ, ತಾಲೂಕು, ಹೊಬಳಿ, ಗ್ರಾಮ, ವರ್ಷ, ಹಂಗಾಮು  ಹಾಗೂ ಬೆಳೆಹಾನಿ ಕಾರಣ select ಮಾಡಿ,Get report ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(bele hani parihara) ಜಮಾ ಮಾಹಿತಿ ದೊರೆಯಲಿದೆ


ನಂತರ view status ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಮಾಹಿತಿ ದೊರೆಯಲಿದೆ



Input subsidy for croploss-ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.


ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್‌ ಸಬ್ಸಿಡಿ ರೈತರ ಬ್ಯಾಂಕ್‌ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

ಈ ಲೇಖನದ ಕೊನೆಯಲ್ಲಿ ಪಟ್ಟಿಯನ್ನು ಲಗತ್ತಿಸಲಾಗಿದೆ ಇದೇ ರೀತಿ ಎಲ್ಲಾ ಗ್ರಾಮ ಪಂಚಾಯತಿ,ರೈತ ಸಂಪರ್ಕ ಕೇಂದ್ರಗಳಲ್ಲಿ FID ಮಾಡಿಸದ ಪಟ್ಟಿಯನ್ನು ಲಗತ್ತಿಸಲಾಗಿದ್ದು,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ FID ಮಾಡಿಸಿಕೊಳ್ಳಿ

]]>
Thu, 15 May 2025 06:33:17 +0530 shivuagrico
Free bike repair training&ಉಚಿತ ಊಟ ವಸತಿಯೊಂದಿಗೆ ಬೈಕ್ ರಿಪೇರಿ ತರಬೇತಿ https://krushirushi.in/Free-bike-repair-training-2093 https://krushirushi.in/Free-bike-repair-training-2093 Free bike repair training-ಉಚಿತ ಊಟ ವಸತಿಯೊಂದಿಗೆ ಬೈಕ್ ರಿಪೇರಿ ತರಬೇತಿ

Free CCTV Installation and repair training-ಉಚಿತ ಊಟ ವಸತಿಯೊಂದಿಗೆ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿ

Free mobile repair training-ಉಚಿತ ಊಟ ವಸತಿಯೊಂದಿಗೆ 1 ತಿಂಗಳ ಮೊಬೈಲ್ ರಿಪೇರಿ ತರಭೇತಿ

ಇದೇ ರೀತಿ ಬೇರೆ ಜಿಲ್ಲೆಗಳಲ್ಲೂ ಲೀಡ್ ಬ್ಯಾಂಕ್ ವತಿಯಿಂದ ತರಭೇತಿಗಳು ನಡೆಯುತ್ತವೆ,ಹೆಚ್ಚಿನ ಮಾಹಿತಿಗಾಗಿ ನಿಮ್ಮ ಜಿಲ್ಲೆಯ ಲೀಡ್ ಬ್ಯಾಂಕ್ ಸಂಪರ್ಕಿಸಿ


Free tailoring training-ಉಚಿತ ಊಟ ವಸತಿಯೊಂದಿಗೆ ಹೊಲಿಗೆ ಯಂತ್ರ ತರಭೇತಿ


ಉಚಿತ ಉಚಿತ ಉಚಿತ
*ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ ಮಹಿಳೆಯರ ಉಚಿತ ಹೊಲಿಗೆ ತರಬೇತಿಯನ್ನು ದಿನಾಂಕ 2.6.2025 ರಿಂದ 2.7.2025  ರ ವರೆಗೆ 31 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ* 

ಹಾವೇರಿ ಜಿಲ್ಲೆಯ  ಗ್ರಾಮೀಣ ಭಾಗದ BPL ರೇಷನ್ ಕಾರ್ಡ ಹೊಂದಿದ 18-45 ವಯಸ್ಸಿನ ನಿರುದ್ಯೋಗಿ ಯುವತಿಯರಿಗೆ ಅವಕಾಶವಿದೆ.
 *ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ.*
ತರಬೇತಿಯಲ್ಲಿ ಕಲಿಸುವ ವಿಷಯಗಳು 
ಕಟೋರಿ ಬ್ಲೌಸ್
ಪ್ರಿನ್ಸೆಸ್ ಕಟ್ ಬ್ಲೌಸ್ 
ಬೋಟ್ ನೆಕ್ ಬ್ಲೌಸ್ 
ಸಾದಾ ಬ್ಲೌಸ್
ಹೈ ನೆಕ್ ಬ್ಲೌಸ್
V ನೆಕ್ ಬ್ಲೌಸ್ 
ಫುಲ್ ಸ್ಲೀವ್ ಬ್ಲೌಸ್ ಹೊಲಿಯುವುದು 
ಚೂಡಿದಾರ್ ಹೊಲಿಯುವುದು 
ಸಣ್ಣ ಮಕ್ಕಳ ಬಟ್ಟೆ ಹೊಲಿಯುವುದು 
ಯೂನಿಫಾರ್ಮ್
ಲಾಂಗ್ ಗೌನ್ ಹೊಲಿಯುವುದು
ಕ್ರಾಪ್ ಟಾಪ್ ಹೊಲಿಯುವುದು
ನೈಟ್ ಡ್ರೆಸ್ ಹೊಲಿಯುವುದು
ಮುಂತಾದವುಗಳನ್ನು ಉಚಿತವಾಗಿ ಕಲಿಸುತ್ತೇವೆ..

ತಮ್ಮ ಹೆಸರನ್ನು ಫೋನ್ ಮೂಲಕ ನೋಂದಾಯಿಸಿಕೊಳ್ಳಲು *8660219375* ನಂಬರ್ ಗೆ ಕಾಲ್ ಮಾಡಿ.

]]>
Wed, 14 May 2025 12:56:28 +0530 shivuagrico
2018 ರಿಂದ ಇಲ್ಲಿಯವರೆಗೂ ಕರ್ನಾಟಕದಲ್ಲಿ ಯಾರಿಗೆಲ್ಲಾ ಎಷ್ಟು ಸಾಲ ಮನ್ನಾ ಆಗಿದೆ? ಅರ್ಹತೆಗಳೇನು? ಚೆಕ್ ಮಾಡಿ&Bele sala manna status https://krushirushi.in/Bele-sala-manna-list-2092 https://krushirushi.in/Bele-sala-manna-list-2092 2018 ರಿಂದ ಇಲ್ಲಿಯವರೆಗೂ ಕರ್ನಾಟಕದಲ್ಲಿ ಯಾರಿಗೆಲ್ಲಾ ಎಷ್ಟು ಸಾಲ ಮನ್ನಾ ಆಗಿದೆ? ಅರ್ಹತೆಗಳೇನು? ಚೆಕ್ ಮಾಡಿ-Bele sala manna status 

2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಇದ್ದಾಗ ರಾಜ್ಯದ ರೈತರ ಸಾಲಮನ್ನಾ(Bele sala manna) ಮಾಡಿದ್ದರು.ಆದರೆ ಅದರಲ್ಲಿ ಕೇಲವು ರೈತರ ದಾಖಲೆಗಳ ಕೊರತೆಯಿಂದಾಗಿ ಬಾಕಿ ಉಳಿದ ಪ್ರಕರಣಗಳಲ್ಲಿ ದಾಖಲಾತಿಗಳನ್ನು ಸಲ್ಲಿಸಿದ ನಂತರ ಸಾಲಮನ್ನಾ ಆಗುತ್ತಿದೆ.ಹಾಗಾದರೆ ಈ ಲೇಖನದಲ್ಲಿ ಯಾವೆಲ್ಲಾ ದಾಖಲಾತಿಗಳು ಬೇಕಾಗಬಹುದು ಎಂದು ಚೆಕ್ ಮಾಡಬಹುದು.

ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

ನಂತರ "Revenue department/ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು"(Revenue department services)ಮೇಲೆ ಕ್ಲಿಕ್ ಮಾಡಿ

ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ"(farmer) ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು"(Submit)ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ(Crop loan wavier) ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ(Bele sala manna list) ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ

ನಂತರ "CLWS ರೈತನ ಅರ್ಹತೆ" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್(bank) select ಮಾಡಿ,ಸಲ್ಲಿಸು/Submit ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ(crop loan wavier) ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ

]]>
Wed, 14 May 2025 06:32:27 +0530 shivuagrico
Free CCTV Installation and repair training&ಉಚಿತ ಊಟ ವಸತಿಯೊಂದಿಗೆ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿ https://krushirushi.in/Free-CCTV-training-2091 https://krushirushi.in/Free-CCTV-training-2091 Free CCTV Installation and repair training-ಉಚಿತ ಊಟ ವಸತಿಯೊಂದಿಗೆ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿ

Free mobile repair training-ಉಚಿತ ಊಟ ವಸತಿಯೊಂದಿಗೆ 1 ತಿಂಗಳ ಮೊಬೈಲ್ ರಿಪೇರಿ ತರಭೇತಿ

ಇದೇ ರೀತಿ ಬೇರೆ ಜಿಲ್ಲೆಗಳಲ್ಲೂ ಲೀಡ್ ಬ್ಯಾಂಕ್ ವತಿಯಿಂದ ತರಭೇತಿಗಳು ನಡೆಯುತ್ತವೆ,ಹೆಚ್ಚಿನ ಮಾಹಿತಿಗಾಗಿ ನಿಮ್ಮ ಜಿಲ್ಲೆಯ ಲೀಡ್ ಬ್ಯಾಂಕ್ ಸಂಪರ್ಕಿಸಿ


Free tailoring training-ಉಚಿತ ಊಟ ವಸತಿಯೊಂದಿಗೆ ಹೊಲಿಗೆ ಯಂತ್ರ ತರಭೇತಿ


ಉಚಿತ ಉಚಿತ ಉಚಿತ
*ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ ಮಹಿಳೆಯರ ಉಚಿತ ಹೊಲಿಗೆ ತರಬೇತಿಯನ್ನು ದಿನಾಂಕ 2.6.2025 ರಿಂದ 2.7.2025  ರ ವರೆಗೆ 31 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ* 

ಹಾವೇರಿ ಜಿಲ್ಲೆಯ  ಗ್ರಾಮೀಣ ಭಾಗದ BPL ರೇಷನ್ ಕಾರ್ಡ ಹೊಂದಿದ 18-45 ವಯಸ್ಸಿನ ನಿರುದ್ಯೋಗಿ ಯುವತಿಯರಿಗೆ ಅವಕಾಶವಿದೆ.
 *ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ.*
ತರಬೇತಿಯಲ್ಲಿ ಕಲಿಸುವ ವಿಷಯಗಳು 
ಕಟೋರಿ ಬ್ಲೌಸ್
ಪ್ರಿನ್ಸೆಸ್ ಕಟ್ ಬ್ಲೌಸ್ 
ಬೋಟ್ ನೆಕ್ ಬ್ಲೌಸ್ 
ಸಾದಾ ಬ್ಲೌಸ್
ಹೈ ನೆಕ್ ಬ್ಲೌಸ್
V ನೆಕ್ ಬ್ಲೌಸ್ 
ಫುಲ್ ಸ್ಲೀವ್ ಬ್ಲೌಸ್ ಹೊಲಿಯುವುದು 
ಚೂಡಿದಾರ್ ಹೊಲಿಯುವುದು 
ಸಣ್ಣ ಮಕ್ಕಳ ಬಟ್ಟೆ ಹೊಲಿಯುವುದು 
ಯೂನಿಫಾರ್ಮ್
ಲಾಂಗ್ ಗೌನ್ ಹೊಲಿಯುವುದು
ಕ್ರಾಪ್ ಟಾಪ್ ಹೊಲಿಯುವುದು
ನೈಟ್ ಡ್ರೆಸ್ ಹೊಲಿಯುವುದು
ಮುಂತಾದವುಗಳನ್ನು ಉಚಿತವಾಗಿ ಕಲಿಸುತ್ತೇವೆ..

ತಮ್ಮ ಹೆಸರನ್ನು ಫೋನ್ ಮೂಲಕ ನೋಂದಾಯಿಸಿಕೊಳ್ಳಲು *8660219375* ನಂಬರ್ ಗೆ ಕಾಲ್ ಮಾಡಿ.

]]>
Tue, 13 May 2025 12:43:42 +0530 shivuagrico
Karnataka rains&ಈ ಜಿಲ್ಲೆಗಳಲ್ಲಿ ಮೇ 17 ರವರೆಗೂ ಸುರಿಯಲಿದೆ ಮಳೆ https://krushirushi.in/Karnataka-rains-2090 https://krushirushi.in/Karnataka-rains-2090 Karnataka rains-ಈ ಜಿಲ್ಲೆಗಳಲ್ಲಿ ಮೇ 17 ರವರೆಗೂ ಸುರಿಯಲಿದೆ ಮಳೆ


ಎಲ್ಲೆಲ್ಲಿ ಮಳೆ ಮುನ್ಸೂಚನೆ?

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಕಲಬುರಗಿ ಹಾಗೂ ಚಿಕ್ಕಬಳ್ಳಾಪುರ ಸೇರಿ 6 ಜಿಲ್ಲೆಗಳಿಗೆ ಗುಡುಗು ಮಿಂಚು ಸಹಿತ ಬಿರುಗಾಳಿ ಮಳೆ ಬರಲಿದೆ. ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ವೇಗ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಲ್ಲದೆ ಬೀದರ್, ಬೆಳಗಾವಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾವೇರಿ, ಕೊಪ್ಪಳ , ಶಿವಮೊಗ್ಗ, ಉತ್ತರ ಕನ್ನಡ ಹಾಗೂ ಯಾದಗಿರಿ ಜಿಲ್ಲೆಗಳಿಗೂ ಮುಂದಿನ ಮೂರು ಗಂಟೆಯಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ನೌಕಾಸ್ಟ್ ವರದಿ ನೀಡಿದೆ. 


1 ವಾರದ ಹವಾಮಾನ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿಯಲ್ಲಿ ಮಳೆ ಆಗಲಿದೆ.

ದಕ್ಷಿಣ ಕರ್ನಾಟಕದಲ್ಲಿ ಭಾರಿ ಮಳೆ

ಕೋಲಾರ, ಚಿಕ್ಕಮಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದೆ. ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿತ್ರದುರ್ಗ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೇ 11 ನೇ ತಾರೀಕಿಗೆ ಅಲರ್ಟ್ ನೀಡಿದೆ.

ನಾಳೆಯೂ ಬೆಂಗಳೂರಿಗೆ ಹವಾಮಾನ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ,ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದುಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕರಾವಳಿ ಕರ್ನಾಟಕ:


ಮೇ 17 ರವರೆಗೂ ದಕ್ಷಿಣ ಕರ್ನಾಟಕಕ್ಕೆ ಹೆಚ್ಚು ಮಳೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

ತಾಪಮಾನ ಕಡಿಮೆಯಾಗುವ ಮುನ್ಸೂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳೇನೂ ಇರುವುದಿಲ್ಲ. ಆದರೆ, ತಾಪಮಾನವು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.


ಬೆಂಗಳೂರು ನಗರದ ಹವಾಮಾನ

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಿನ ಹವಾಮಾನವು, ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆಯ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಲಘು ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ. ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 33°C ಮತ್ತು ಕನಿಷ್ಠ ತಾಪಮಾನ 22°C ಇರಲಿದೆ.

ನೈಋತ್ಯ ಮಾನ್ಸೂನ್ ಮೇ 13, 2025 ರ ಸುಮಾರಿಗೆ ದಕ್ಷಿಣ ಅಂಡಮಾನ್ ಸಮುದ್ರ, ಆಗ್ನೇಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳಿಗೆ ಮುಂದುವರಿಯುವ ಸಾಧ್ಯತೆಯಿದೆ. ಇದು ನಂತರದ 4-5 ದಿನಗಳಲ್ಲಿ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಮಾಲ್ಡೀವ್ಸ್ ಮತ್ತು ಕೊಮೊರಿನ್ ಪ್ರದೇಶದ ಮೇಲೆ ಮತ್ತಷ್ಟು ಮುಂದುವರಿಯುವ ಸಾಧ್ಯತೆಯಿದೆ; ದಕ್ಷಿಣ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಸಂಪೂರ್ಣ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಅಂಡಮಾನ್ ಸಮುದ್ರ; ಮತ್ತು ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ಮುಂದುವರಿಯುವ ಸಾಧ್ಯತೆಯಿದೆ ಎಂದಿದೆ.

 *ಇವತ್ತು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.* 

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹಾಗೂ ರಾಮನಗರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ.


ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ ಸಮುದ್ರ ಕಡೆಗೆ ಮುಂಗಾರು ಮಾರುತಗಳು ಪ್ರವೇಶಿಸುತ್ತಿರುವ ಲಕ್ಷಣಗಳಿವೆ

]]>
Tue, 13 May 2025 06:03:18 +0530 shivuagrico
Gruhalakshmi pending payment&ಈ ಪಟ್ಟಿಯಲ್ಲಿರುವವರಿಗೆ ಪ್ರತಿ ವಾರ ಒಂದು ಕಂತಿನಂತೆ ಮುಂದಿನ 3 ವಾರ 3 ಕಂತಿನ ಗೃಹಲಕ್ಷ್ಮಿ ಹಣ ಜಮಾ https://krushirushi.in/Gruhalakshmi-pending-payment-2089 https://krushirushi.in/Gruhalakshmi-pending-payment-2089 Gruhalakshmi pending payment-ಈ ಪಟ್ಟಿಯಲ್ಲಿರುವವರಿಗೆ ಪ್ರತಿ ವಾರ ಒಂದು ಕಂತಿನಂತೆ ಮುಂದಿನ 3 ವಾರ 3 ಕಂತಿನ ಗೃಹಲಕ್ಷ್ಮಿ ಹಣ ಜಮಾ

ಉಡುಪಿ ಜಿಲ್ಲಾ ಪಂಚಾಯತ್‌, ಕೃಷಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳು ಹಣ ಬಾಕಿ ಉಳಿದಿದೆ. ಈ ಬಾಕಿ ಉಳಿದ ಹಣವನ್ನ ಹಂತ ಹಂತವಾಗಿ ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದು, ಆದಷ್ಟು ಶೀಘ್ರದಲ್ಲಿ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. 

ಬಾಕಿ ಇರುವ ಮೂರು ತಿಂಗಳ-ಜನವರಿ, ಫೆಬ್ರವರಿ ಮತ್ತು ಮಾರ್ಚ್-ಕಂತಿನ ಮೊತ್ತವನ್ನು ಮೇ ತಿಂಗಳಲ್ಲಿ ಹಂತಹಂತವಾಗಿ ಬಿಡುಗಡೆ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಕಂತುಗಳಿಗೆ ಹಣಕಾಸು ಇಲಾಖೆಯಿಂದ ಈಗಾಗಲೇ ಅನುಮೋದನೆ ಲಭಿಸಿದೆ. ಮೊದಲ ಕಂತು ಒಂದು ವಾರದಲ್ಲಿ, ಎರಡನೇ ಕಂತು ಮುಂದಿನ ವಾರದಲ್ಲಿ ಹಾಗೂ ಮೂರನೇ ಕಂತು ತಿಂಗಳ ಅಂತ್ಯದೊಳಗೆ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ' ಎಂಬ ಭರವಸೆಯನ್ನು ನೀಡಿದ್ದಾರೆ. 

 

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Mon, 12 May 2025 20:26:48 +0530 shivuagrico
Dried mango leaves&ಒಣಗಿದ ಮಾವು,ಪೇರಲ,ಹಲಸಿನ ಎಲೆಗಳಿಗೆ ಭರ್ಜರಿ ಬೇಡಿಕೆ,ಒಂದು ಪ್ಯಾಕೆಟ್ ಗೆ 500 ರೂಪಾಯಿ https://krushirushi.in/Dried-mango-leaves-2088 https://krushirushi.in/Dried-mango-leaves-2088 Dried Mango leaves-ಒಣಗಿದ ಮಾವು,ಪೇರಲ,ಹಲಸಿನ ಎಲೆಗಳಿಗೆ ಭರ್ಜರಿ ಬೇಡಿಕೆ,ಒಂದು ಪ್ಯಾಕೆಟ್ ಗೆ 500 ರೂಪಾಯಿ


ಹಿಂದೂ ಧರ್ಮದಲ್ಲಿ ಮಾವಿನ ಎಲೆಗಳಿಗೆ (Mango Leaves) ವಿಶೇಷ ಸ್ಥಾನವಿದೆ. ಶುಭ ಸಮಾರಂಭಗಳು ಮತ್ತು ಕಾರ್ಯಗಳ ಸಮಯದಲ್ಲಿ, ಈ ಮಾವಿನ ಎಲೆಗಳನ್ನು ಬಳಕೆ ಮಾಡಿಕೊಂಡು ಕಮಾನುಗಳಾಗಿ ಅಲಂಕರಿಸಲು ಬಳಸಲಾಗುತ್ತದೆ. ಆದರೆ ಯುಕೆ ಅಂಗಡಿಯಲ್ಲಿ ಒಣಗಿದ ಮಾವಿನ ಎಲೆಗಳನ್ನು ಪ್ಯಾಕೆಟ್‌ಗೆ ₹500 ಕ್ಕೆ ಮಾರಾಟ ಮಾಡಲಾಗುತ್ತದೆ.ಈ ವಿಷಯ ತಿಳಿದು ನೀವು ಅಚ್ಚರಿ ಪಡಬಹುದು.

ಆದರೆ ಇದು ನಿಜ. ಇಂತಹ ವಿಶಿಷ್ಟವಾದ ಮಾವಿನ ಎಲೆಗಳ ಬಳಕೆಯು ಮನೆಗೆ ಅದೃಷ್ಟವನ್ನು ತರುತ್ತದೆ ಎಂದು ನಂಬಲಾಗಿದೆ. ಆದರೆ ಈಗ ಈ ಒಣಗಿದ ಮಾವು, ಪೇರಲ ಮತ್ತು ಹಲಸಿನ ಎಲೆಗಳನ್ನು ವಿದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಈಗ ಸಾಮಾಜಿಕ ಜಾಲತಾಣಗಳಲ್ಲಿ ಒಂದು ರೀಲ್ ವೈರಲ್ ಆಗುತ್ತಿದೆ. ಇದು ಯುಕೆಯ ಅಂಗಡಿಯಿಂದ ಬಂದ ರೀಲ್. ಅದು ಮಾವು, ಹಲಸು ಮತ್ತು ಪೇರಲ ಎಲೆಗಳನ್ನು ಸಣ್ಣ ಪ್ಲಾಸ್ಟಿಕ್ ಚೀಲಗಳಲ್ಲಿ ಮಾರಾಟ ಮಾಡುವುದನ್ನು ತೋರಿಸುತ್ತದೆ. ಪ್ರತಿ ಪ್ಯಾಕೆಟ್ ಬೆಲೆ £4.49. ಅಂದರೆ, ನಮ್ಮ ರಾಷ್ಟ್ರೀಯ ಕರೆನ್ಸಿಯಲ್ಲಿ, ಸರಿಸುಮಾರು ₹500. ಈ ವಿಡಿಯೋ ನೋಡಿದ ಒಬ್ಬ ನೆಟ್ಟಿಗ ನನ್ನ ಮನೆಗೆ ಬನ್ನಿ ನಾನು ನಿನಗೆ ಎರಡು ಕಿಲೋ ಮಾವಿನ ಎಲೆಗಳನ್ನು ಉಚಿತವಾಗಿ ಕೊಡುತ್ತೇನೆ ಎಂದಿದ್ದಾರೆ. ಈಗ ಭಾರತೀಯರು ನಿಮ್ಮ ಮನೆಯ ಹಿಂದಿನ ಅಂಗಳವನ್ನು ಗುಡಿಸಿ ಒಣಗಿದ ಮಾವಿನ ಎಲೆಗಳನ್ನು ಎಸೆಯುತ್ತಿದ್ದರೆ ಊಹಿಸಿ. "ಇನ್ನು ಮುಂದೆ ಪೇರಲ ಮತ್ತು ಹಲಸಿನ ಎಲೆಗಳನ್ನು ಎಸೆಯುವ ಮೊದಲು ಎರಡು ಬಾರಿ ಯೋಚಿಸಿ" ಎಂದು ಅವರು ತಮಾಷೆಯಾಗಿ ಕಾಮೆಂಟ್ ಮಾಡುತ್ತಿದ್ದಾರೆ. ಆದಾಗ್ಯೂ, ಈ ಒಣಗಿದ ಎಲೆಗಳನ್ನು ಟ್ರೆಂಡಿ ಡಿಟಾಕ್ಸ್ ಪಾನೀಯಗಳನ್ನು ತಯಾರಿಸಲು ಮಾತ್ರವಲ್ಲದೆ ಅಕ್ವೇರಿಯಂಗಳಲ್ಲಿ ಇಡಲು ಸಹ ಬಳಸಲಾಗುತ್ತದೆ.

https://www.instagram.com/reel/DHo3zX_tEMW/?igsh=MTE5dzI4YTRsOGp4bQ==

ಇದರ ಪ್ರಯೋಜನ ಏನು?

ಹೌದು, ನೀವು ಸರಿಯಾಗಿಯೇ ಓದಿದ್ದೀರಿ. ಈ ಒಣಗಿದ ಎಲೆಗಳನ್ನು ಮೀನು ಅಕ್ವೇರಿಯಂಗಳಲ್ಲಿ ಇಡಲಾಗುತ್ತಿದೆ. ಜಲಚರ ಪ್ರಾಣಿಗಳು ವಿಶೇಷವಾಗಿ ಮಾವು ಮತ್ತು ಪೇರಲ ಎಲೆಗಳನ್ನು ಇಷ್ಟಪಡುತ್ತವೆ. ಸಿಹಿನೀರಿನ ಟ್ಯಾಂಕ್‌ಗಳಿಗೆ ಮಾವಿನ ಎಲೆಗಳನ್ನು ಸೇರಿಸಿದಾಗ, ಈ ಎಲೆಗಳು ನಿಧಾನವಾಗಿ ಟ್ಯಾನಿನ್‌ಗಳನ್ನು ಬಿಡುಗಡೆ ಮಾಡುತ್ತವೆ.


ಇವು ನೀರಿನಲ್ಲಿರುವ pH ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಅನೇಕ ಉಷ್ಣವಲಯದ ಮೀನುಗಳು ನೈಸರ್ಗಿಕ ಆವಾಸಸ್ಥಾನಗಳಿಗೆ ಹೊಂದಿಕೊಳ್ಳುತ್ತವೆ. ಈ ಒಣಗಿದ ಎಲೆಗಳು ಜೈವಿಕ ಪದರದ ಬೆಳವಣಿಗೆಯನ್ನು ಸಹ ಬೆಂಬಲಿಸುತ್ತವೆ. ಇವು ಸಣ್ಣ ಸೀಗಡಿಗಳು, ಕೆಲವು ರೀತಿಯ ಮೀನುಗಳಿಗೆ ಒಂದು ರೀತಿಯ ಬಫೆ. ಹಾಗಾಗಿ, ಒಣಗಿದ ಮಾವಿನ ಎಲೆಗಳನ್ನು ಪ್ಯಾಕ್ ಮಾಡಿ ರೂ. 500 ಕ್ಕೆ ಮಾರಾಟವಾಗುತ್ತಿದೆ. ಇವುಗಳನ್ನು ಡಿಸೈನರ್ ಗಾಜಿನ ಟ್ಯಾಂಕ್‌ನಲ್ಲಿ ಇರಿಸಲಾಗುತ್ತಿದೆ.

ಇತರೆ ಪ್ರಯೋಜನ

ಒಣಗಿದ ಮಾವಿನ ಎಲೆಗಳು ಅಕ್ವೇರಿಯಂ ಸೌಂದರ್ಯಕ್ಕಾಗಿ ಮಾತ್ರವಲ್ಲ. ತಾಜಾ ಕೋಮಲ ಮಾವಿನ ಎಲೆಗಳನ್ನು ಕೆಲವೊಮ್ಮೆ ಬುಡಕಟ್ಟು ಅಥವಾ ಕರಾವಳಿ ಪಾಕಪದ್ಧತಿಯಲ್ಲಿ ಬಳಸಲಾಗುತ್ತದೆ. ಬಿಸಿಲಿನಲ್ಲಿ ಒಣಗಿಸಿದ ಎಲೆಗಳನ್ನು ಆಹಾರಗಳಿಗೆ ರುಚಿಯನ್ನು ಸೇರಿಸಲು ಬಳಸಲಾಗುತ್ತದೆ. ಶೀತ ಮತ್ತು ಕೆಮ್ಮಿಗೆ ಮನೆಮದ್ದುಗಳಲ್ಲಿ ಬಳಸಲಾಗುತ್ತದೆ. ಇದನ್ನು ಒಣಗಿಸಿ ಆರೋಗ್ಯ ಪೂರಕವಾಗಿ ತೆಗೆದುಕೊಳ್ಳಲಾಗುತ್ತದೆ.50+ Happy Mothers Day Wishes: ತಾಯಂದಿರ ದಿನದಂದು ನಿಮ್ಮ ಪ್ರೀತಿಯ ಅಮ್ಮನಿಗೆ ಶುಭ ಕೋರಲು 50ಕ್ಕೂ ಹೆಚ್ಚು ಶುಭಾಶಯಗಳು, ಸಂದೇಶಗಳು, ಫೋಟೋಗಳು ಇಲ್ಲಿವೆಆಯುರ್ವೇದ ಮತ್ತು ಜಾನಪದ ಔಷಧದಲ್ಲಿ, ಒಣಗಿದ ಮಾವಿನ ಎಲೆಯ ಪುಡಿ ರಕ್ತದಲ್ಲಿನ ಸಕ್ಕರೆ ನಿಯಂತ್ರಣ, ಜೀರ್ಣಕ್ರಿಯೆ ಮತ್ತು ಉರಿಯೂತಕ್ಕೆ ಸಹಾಯ ಮಾಡುತ್ತದೆ ಎಂದು ನಂಬಲಾಗಿದೆ. ಕೆಲವರು ಒಣಗಿದ ಪುಡಿಯನ್ನು ಬೆಚ್ಚಗಿನ ನೀರಿನೊಂದಿಗೆ ಬೆರೆಸಿ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುತ್ತಾರೆ. ಇತರರು ಇದನ್ನು ಚಹಾ ಅಥವಾ ಮನೆಯಲ್ಲಿ ತಯಾರಿಸಿದ ಗಿಡಮೂಲಿಕೆ ಕ್ಯಾಪ್ಸುಲ್‌ಗಳಿಗೆ ಸೇರಿಸುತ್ತಾರೆ. ಅದು ಅಷ್ಟು ರುಚಿಕರವಾಗಿರುವುದಿಲ್ಲ. ಆದರೆ ಆರೋಗ್ಯವನ್ನು ಪ್ರೀತಿಸುವವರು ಇದನ್ನು ಚೆನ್ನಾಗಿ ಸ್ವೀಕರಿಸುತ್ತಾರೆ. ಇಲ್ಲಿ ಒದಗಿಸಲಾದ ಮಾಹಿತಿಯು ತಜ್ಞರು ಒದಗಿಸಿದ ಮಾಹಿತಿಯನ್ನು ಆಧರಿಸಿದೆ. ನಿಮಗೆ ಯಾವುದೇ ಆರೋಗ್ಯ ಸಮಸ್ಯೆಗಳಿದ್ದರೆ ನೇರವಾಗಿ ವೈದ್ಯಕೀಯ ವೃತ್ತಿಪರರನ್ನು ಸಂಪರ್ಕಿಸುವುದು ಸೂಕ್ತ.

]]>
Mon, 12 May 2025 12:16:25 +0530 shivuagrico
Annabhagya list&ಈ ಪಟ್ಟಿಯಲ್ಲಿರುವವರಿಗೆ 3 ತಿಂಗಳ ಪಡಿತರ ಮುಂಗಡ ವಿತರಿಸಲು ಮುಂದಾದ ಸರ್ಕಾರ https://krushirushi.in/Annabhagya-list-2087 https://krushirushi.in/Annabhagya-list-2087 Annabhagya list-ಈ ಪಟ್ಟಿಯಲ್ಲಿರುವವರಿಗೆ 3 ತಿಂಗಳ ಪಡಿತರ ಮುಂಗಡ ವಿತರಿಸಲು ಮುಂದಾದ ಸರ್ಕಾರ

ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಬಿಪಿಎಲ್ ಪಡಿತರ ಚೀಟಿ ಫಲಾನುಭವಿಗಳಿಗೆ ಮೂರು ತಿಂಗಳ ಪಡಿತರವನ್ನು ಮುಂಗಡವಾಗಿ ವಿತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ನ್ಯಾಯಬೆಲೆ ಅಂಗಡಿಗಳ ಮೂಲಕ ಫಲಾನುಭವಿಗಳಿಗೆ ಪಡಿತರ ವಿತರಿಸಲು ಕೇಂದ್ರ ಸರ್ಕಾರ ಆದೇಶ ನೀಡಿದೆ. ಮೂರು ತಿಂಗಳ ಅವಧಿಗೆ ಆಹಾರ ಧಾನ್ಯಗಳನ್ನು ಮುಂಗಡವಾಗಿ ಭಾರತೀಯ ಆಹಾರ ನಿಗಮದ ಗೋದಾಮುಗಳಿಗೆ ಸಾಗಿಸಲು ಕ್ರಮ ಕೈಗೊಳ್ಳಲಾಗಿದೆ.

ಇದರಿಂದಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಕಾರ್ಡ್ ಪ್ರತಿ ಸದಸ್ಯರಿಗೆ ತಲಾ 15 ಕೆಜಿ ಅಕ್ಕಿ ಸಿಗಲಿದೆ. ಜೂನ್, ಜುಲೈ, ಆಗಸ್ಟ್ ಅವಧಿಗೆ ಆಹಾರ ಭದ್ರತೆ ಕಾಯ್ದೆಯಡಿ ಪಡಿತರ ಹಂಚಿಕೆಗೆ ಸಂಬಂಧಿಸಿದಂತೆ ಭಾರತೀಯ ಆಹಾರ ನಿಗಮ ಆಹಾರ ಪದಾರ್ಥಗಳ ಬೇಡಿಕೆ ವಿವರಗಳನ್ನು ಸಿದ್ಧಪಡಿಸಿದೆ.

Annabhagya list-ಈ ಪಟ್ಟಿಯಲ್ಲಿರುವವರಿಗೆ ಈ ತಿಂಗಳು ಸಿಗಲಿದೆ 15 ಕೆಜಿ ಅನ್ನಭಾಗ್ಯ ಅಕ್ಕಿ

ಅನ್ನಭಾಗ್ಯ ಫಲಾನುಭವಿಗಳಿಗೆ ಸಿಹಿಸುದ್ದಿ ಎನ್ನುವಂತೆ ಈ ತಿಂಗಳು ಕುಟುಂಬದ ಪ್ರತಿ ಸದಸ್ಯರಿಗೆ ತಲಾ 15 ಕೆ.ಜೆ ಅಕ್ಕಿಯನ್ನು ವಿತರಿಸಲಾಗುತ್ತದೆ. 


ಈ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್ ಮುನಿಯಪ್ಪ ಮಾಹಿತಿ ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆ.ಜಿ. ಅಕ್ಕಿಯನ್ನು ಸೇರಿಸಿ, ಈ ತಿಂಗಳು 15 ಕೆ.ಜಿ. ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. 


ಅಂದಹಾಗೇ ರಾಜ್ಯ ಸರ್ಕಾರದಿಂದ ಈ ಮೊದಲು ಹತ್ತು ಕೆಜಿ ಅಕ್ಕಿ ಹಾಗೂ ಹೆಚ್ಚುವರಿ ಐದು ಕೆಜಿ ಅಕ್ಕಿಯ ಬದಲಾಗಿ ಹಣವನ್ನು ಅನ್ನಭಾಗ್ಯ ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುತ್ತಿತ್ತು. ಅದನ್ನು ನಿಲ್ಲಿಸಲಾಗಿದ್ದು, ಈ ತಿಂಗಳು ಅನ್ನಭಾಗ್ಯ ಫಲಾನುಭವಿಗಳಿಗೆ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 15 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತದೆ.


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 10ಕೆಜಿ ಅನ್ನಭಾಗ್ಯ ಅಕ್ಕಿ(Annabhagya)

]]>
Sun, 11 May 2025 22:28:32 +0530 shivuagrico
Karnataka Mansoon&16 ವರ್ಷಗಳ ನಂತರ 3 ದಿನ ಮೊದಲೇ ಮುಂಗಾರು ಪ್ರವೇಶ,ಈ ಭಾರಿಯ ಮಳೆ ಬೆಳೆ ಹೇಗಿರಲಿದೆ? https://krushirushi.in/Karnataka-Mansoon-2086 https://krushirushi.in/Karnataka-Mansoon-2086 Karnataka Mansoon-16 ವರ್ಷಗಳ ನಂತರ 3 ದಿನ ಮೊದಲೇ ಮುಂಗಾರು ಪ್ರವೇಶ,ಈ ಭಾರಿಯ ಮಳೆ ಬೆಳೆ ಹೇಗಿರಲಿದೆ?


ರಾಜ್ಯ ಕರಾವಳಿ ಭಾಗಕ್ಕೆ ಒಂದು ತಿಂಗಳೊಳಗೆ ಮುಂಗಾರು ಪ್ರವೇಶ ಪಡೆಯುವ ಸಾಧ್ಯತೆ ಇದ್ದು, ಈ ಬಾರಿ ವಾಡಿಕೆ ಅಥವಾ ವಾಡಿಕೆಗಿಂತ ಅಧಿಕ ಮಳೆ ನಿರೀಕ್ಷಿಸಲಾಗಿದೆ. 

ಕೇಂದ್ರ ಹವಾಮಾನ ಇಲಾಖೆ ರೈತರಿಗೆ ಸಿಹಿಸುದ್ದಿ ನೀಡಿದ್ದು, ಈ ಬಾರಿಯ ನೈಋತ್ಯ ಮುಂಗಾರು ಮಳೆ ಕೊಂಚ ಮುಂಚಿತವಾಗಿಯೇ ಆಗಮಿಸಲಿದೆ ಎಂದು ಮಾಹಿತಿ ನೀಡಿದೆ.

ಹೌದು.. ಈ ಕೇಂದ್ರ ಹವಾಮಾನ ಇಲಾಖೆ ಶನಿವಾರ ಮಾಹಿತಿ ನೀಡಿದ್ದು, ವಾಡಿಕೆಯಂತೆ ಕೇರಳಕ್ಕೆ ಜೂನ್ 1ರಂದು ಮಳೆ ಕಾಲಿಡುತ್ತದೆ. ಆದರೆ ಈ ಬಾರಿ ಮುಂಗಾರು ಮಾರುತಗಳು 4 ದಿನಗಳ ಕಾಲ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶ ಮಾಡಲಿದೆ ಎಂದು ಹೇಳಿದೆ.

ಜೂನ್ 1 ರ ಸಾಮಾನ್ಯ ದಿನಾಂಕಕ್ಕಿಂತ ಮುಂಚಿತವಾಗಿ, ಅಂದರೆ ಮೇ 27 ರಂದು ನೈಋತ್ಯ ಮಾನ್ಸೂನ್ ಕೇರಳವನ್ನು ತಲುಪುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಈ ಹಿಂದೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಏಪ್ರಿಲ್‌ನಲ್ಲಿ 2025 ರ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಸಂಚಿತ ಮಳೆಯನ್ನು ಮುನ್ಸೂಚನೆ ನೀಡಿತ್ತು, ಇದು ಭಾರತೀಯ ಉಪಖಂಡದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯೊಂದಿಗೆ ಸಂಬಂಧಿಸಿದ ಎಲ್ ನಿನೊ ಪರಿಸ್ಥಿತಿಗಳ ಸಾಧ್ಯತೆಯನ್ನು ತಳ್ಳಿಹಾಕಿತು.

ಇದನ್ನೂ ಓದಿ
Mansoon rain 2025-ಈ ಭಾರಿ ಮೇ 13ರಿಂದಲೇ ಮನ್ಸೂನ್ ಪ್ರಾರಂಭ,ಮುಂದಿನ 4 ತಿಂಗಳು 1000 ಮೀ.ಮೀ ಮಳೆ

16 ವರ್ಷಗಳಲ್ಲಿ ಇದೇ ಮೊದಲು

ನಿರೀಕ್ಷೆಯಂತೆ ಮಾನ್ಸೂನ್ ಕೇರಳಕ್ಕೆ ಆಗಮಿಸಿದರೆ, ಐಎಂಡಿ ದತ್ತಾಂಶದ ಪ್ರಕಾರ, 2009 ರಲ್ಲಿ ಮೇ 23 ರ ಬಳಿಕ ಇದೇ ಮೊದಲ ಬಾರಿಗೆ ಭಾರತದ ಮುಖ್ಯ ಭೂಭಾಗದಲ್ಲಿ ಮುಂಗಾರು ಮಾರುತಗಳು ಬೇಗನೆ ಪ್ರವೇಶ ಮಾಡುತ್ತಿವೆ.

ಸಾಮಾನ್ಯವಾಗಿ, ನೈಋತ್ಯ ಮಾನ್ಸೂನ್ ಜೂನ್ 1 ರ ವೇಳೆಗೆ ಕೇರಳದ ಮೇಲೆ ಪ್ರಾರಂಭವಾಗಲಿದೆ ಮತ್ತು ಬಳಿಕ ಜುಲೈ 8 ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಇದು ಸೆಪ್ಟೆಂಬರ್ 17 ರ ಸುಮಾರಿಗೆ ವಾಯುವ್ಯ ಭಾರತದಿಂದ ಹಿಮ್ಮೆಟ್ಟಲು ಪ್ರಾರಂಭಿಸುತ್ತದೆ ಮತ್ತು ಅಕ್ಟೋಬರ್ 15 ರ ವೇಳೆಗೆ ಸಂಪೂರ್ಣವಾಗಿ ಹಿಮ್ಮೆಟ್ಟುತ್ತದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜೂನ್ ನಿಂದ ಸೆಪ್ಟೆಂಬರ್ ವರೆಗೆ ನಾಲ್ಕು ತಿಂಗಳ ಮುಂಗಾರು ಋತುವಿನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿಯ ಸರಾಸರಿ 87 ಸೆಂ.ಮೀ. ಮಳೆಯ ಶೇ. 105 ರಷ್ಟು (ಶೇ. 5 ರಷ್ಟು ಮಾದರಿ ದೋಷದೊಂದಿಗೆ) ಸಂಚಿತ ಮಳೆಯಾಗಿದೆ" ಎಂದು ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ. ರವಿಚಂದ್ರನ್ ಹೇಳಿದ್ದಾರೆ.


ಕರಾವಳಿ ಭಾಗದಲ್ಲಿ ಈಗಾಗಲೇ ಉತ್ತಮ ಬೇಸಗೆ ಮಳೆ ಸುರಿಯುತ್ತಿದ್ದು, ಇದೇ ರೀತಿ ಮುಂದುವರೆದು ಮೇ ಅಂತ್ಯ ಅಥವಾ ಜೂನ್ ಮೊದಲ ವಾರ ಕೇರಳಕ್ಕೆ ಮುಂಗಾರು ಪ್ರವೇಶಿಸಿ ಕರ್ನಾಟಕ ಕರಾವಳಿ ತೀರಕ್ಕೆ ಆಗಮಿಸುವ ಸಾಧ್ಯತೆ ಇದೆ. ವಾಡಿಕೆ ಮುಂಗಾರಿಗೆ ಸಮರ್ಪಕ ವಾತಾವರಣ, ಗಾಳಿ, ಮೋಡಗಳು ಸೃಷ್ಟಿಯಾಗುತ್ತಿದ್ದು, ಪೂರ್ವ ಮುಂಗಾರು ಮಳೆ ಕೊನೆಗೊಳ್ಳುವ ಸಂದರ್ಭದಲ್ಲಿ ಮಾನ್ಸೂನ್ ಮಳೆ ತರುವ ಮೋಡಗಳು ಭೂ ಮಧ್ಯ ರೇಖೆಯ ಮುಖೇನ ಬಂದು ಬಾನಂಗಳದಲ್ಲಿ ಶೇಖರಣೆಯಾಗಲಿದೆ. ಇದರಿಂದಾಗಿ ಈ ವರ್ಷವೂ ವಾಡಿಕೆಗೂ ಅಧಿಕ ಮಳೆಯಾಗಬಹುದು.

ಕರಾವಳಿ ಭಾಗದಲ್ಲಿ ಐದು ವರ್ಷಗಳ ಬಳಿಕ 2024ರಲ್ಲಿ ದಾಖಲೆಯ ಮುಂಗಾರು ಮಳೆ ಸುರಿದಿತ್ತು. ಕಳೆದ ವರ್ಷ 3101 ໖.. 2 2 3736 ໖.. ಮಳೆಯಾಗಿತ್ತು. ದ.ಕ. ಜಿಲ್ಲೆಯಲ್ಲಿ ಶೇ.11, ಉಡುಪಿ ಜಿಲ್ಲೆಯಲ್ಲಿ ಶೇ.13 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.31ರಷ್ಟು ಮಳೆ ವಾಡಿಕೆಗಿಂತ ಅಧಿಕ ಸುರಿದಿದೆ. ಒಟ್ಟಾರೆ ಕರಾವಳಿ ಭಾಗದಲ್ಲಿ ಶೇ.20ರಷ್ಟು ಅಧಿಕ ಸುರಿದಿತ್ತು. 
ಪೂರ್ವ ಮುಂಗಾರಿಗೆ ವೇಗ 
ಈ ತಿಂಗಳಾಂತ್ಯಕ್ಕೆ ಪೂರ್ವ ಮುಂಗಾರು ಅವಧಿ ಪೂರ್ಣಗೊಳ್ಳುತ್ತಿದ್ದು, ಈಗಾಗಲೇ ವಾಡಿಕೆಗಿಂತ ಅಧಿಕ ಮಳೆ ಸುರಿದಿದೆ. ಮಾರ್ಚ್ ತಿಂಗಳಿನಿಂದ ಮೇ 8ರವರೆಗೆ ರಾಜ್ಯದ ದಕ್ಷಿಣ ಒಳನಾಡು (ಶೇ.43), ಉತ್ತರ ಒಳನಾಡು (ಶೇ.38), ಮಲೆನಾಡು (ಶೇ.44), ಕರಾವಳಿಯಲ್ಲಿ (ಶೇ.63) ರಷ್ಟು ಮಳೆ ಏರಿಕೆ ಕಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.72, ಉಡುಪಿ ಜಿಲ್ಲೆಯಲ್ಲಿ ಶೇ.77 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.49ರಷ್ಟು ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಅಧಿಕ ಸುರಿದಿದೆ. 

ಸದ್ಯದಲ್ಲೇ ಇನ್ನೊಂದು ವರದಿ 
ಉತ್ತಮ ಮಳೆ ಸುರಿಯುವ ಸಾಧ್ಯತೆಯನ್ನು ಕೆಲ ದಿನಗಳ ಹಿಂದೆ ವರದಿಯಲ್ಲಿ ಭಾರತೀಯ ಹವಾಮಾನ ಇಲಾಖೆಯು ತಿಳಿಸಿತ್ತು. ಅದರಲ್ಲಿ ವಾಡಿಕೆ ಅಥವಾ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆಯನ್ನು ಹೇಳಲಾಗಿತ್ತು. ಆದರೆ, ಈ ತಿಂಗಳಾಂತ್ಯಕ್ಕೆ ಮತ್ತೂಂದು ವರದಿಯನ್ನು ಐಎಂಡಿ ಬಿಡುಗಡೆಗೊಳಿಸಲಿದ್ದು, ಅದರಲ್ಲಿ ಪ್ರದೇಶಾವಾರು ಮಳೆ ವರದಿ ಅಂದಾಜು ತಿಳಿಯಬಹುದಾಗಿದೆ. 

ಕರಾವಳಿ ಸಹಿತ ರಾಜ್ಯದಲ್ಲಿ ಈ ಬಾರಿ ಉತ್ತಮ ಮುಂಗಾರು ಮಳೆ ಸುರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಹವಾಮಾನ ವಿಶ್ಲೇಷಣೆ ಬಿಡುಗಡೆ ಮಾಡಿದ್ದು, ಅದರಂತೆ ಈ ಬಾರಿಯ ಮುಂಗಾರು ಅವಧಿಯಲ್ಲಿ ವಾಡಿಕೆ ಅಥವಾ ವಾಡಿಕೆಗೂ ಅಧಿಕ ಮಳೆ ಸುರಿಯುವ ಸೂಚನೆ ನೀಡಿದೆ. 


ಡಾ| 
ರಾಜೇಗೌಡ,ಹವಾಮಾನ ತಜ್ಞರು,ಬೆಂಗಳೂರು

]]>
Sun, 11 May 2025 17:38:50 +0530 shivuagrico
Koli sakanike&ಉಚಿತ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ https://krushirushi.in/Koli-sakanike-2085 https://krushirushi.in/Koli-sakanike-2085 Koli sakanike-ಉಚಿತ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ


ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ.


ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕೋಳಿ ಮರಿಗಳನ್ನು ವಿತರಿಸಲಾಗುವುದು. ಜೇನು, ಕುರಿ, ಹಸು ಸಾಕಾಣಿಕೆಗೆ ಪ್ರೋತ್ಸಾಹ ನೀಡುತ್ತಿರುವ ಮಾದರಿಯಲ್ಲಿ ನಾಟಿ ಕೋಳಿ ಸಾಕಾಣಿಕೆ ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬಡ ಕುಟುಂಬಗಳ ಮಹಿಳೆಯರಿಗೆ ತಲಾ 20 ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುವುದು. ಪ್ರತಿ ತಾಲೂಕಿಗೆ 106 ಫಲಾನುಭವಿಗಳಂತೆ ಗುರಿ ನಿಗದಿಪಡಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿನ ರೈತ ಮಹಿಳೆಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘದ ಮಹಿಳಾ ಸದಸ್ಯರಿಗೆ, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಯೋಜನೆಯಡಿ ಆದ್ಯತೆ ನೀಡಲಾಗುವುದು.

ನಾಟಿ ಕೋಳಿಗಳಿಗೆ ಪ್ರಸ್ತುತ ಬೇಡಿಕೆ ಹೆಚ್ಚಾಗಿದೆ. ಇವುಗಳ ಸಾಕಾಣೆಗೆ ಹೆಚ್ಚು ಖರ್ಚಾಗುವುದಿಲ್ಲ. ಮನೆ ಮುಂದೆ ಹಿತ್ತಲುಗಳಲ್ಲಿ ಕೋಳಿ ಸಾಕಬಹುದು, ವೆಚ್ಚಕ್ಕಿಂತ ಅಧಿಕ ಲಾಭ ಸಿಗುತ್ತದೆ. ಇವುಗಳ ಸಾಕಾಣಿಕೆಗೆ ಹೆಚ್ಚಿನ ಶ್ರಮ ಅಗತ್ಯವಿರುವುದಿಲ್ಲ. ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಆರ್ಥಿಕ ಸಬಲತೆ ಸಾಧಿಸಲು ತಲಾ 20 ಕೋಳಿ ಮರಿ ವಿತರಿಸಲಾಗುವುದು ಎಂದು ಹೇಳಲಾಗಿದೆ.

1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming 

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ(Vetarnary department)ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.



ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್‌ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.

ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Vetarnary department schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?

ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ


ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.

ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy - https://krushirushi.in/Cattle-shed-subsidy-scheme-1630 

ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.


ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು

ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.


ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.


ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.

ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.


ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.

ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.


ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahvs.karnataka.gov.in/info-2/Schemes+&+Benefits/kn

]]>
Sun, 11 May 2025 06:29:40 +0530 shivuagrico
Mungaru male&ತಿಂಗಳೊಳಗೆ ಮುಂಗಾರು ಆಗಮನ,ಈ ಭಾರಿಯೂ ವಾಡಿಕೆ ಮಳೆ https://krushirushi.in/Mungaru-male-2083 https://krushirushi.in/Mungaru-male-2083 Mungaru male-ತಿಂಗಳೊಳಗೆ ಮುಂಗಾರು ಆಗಮನ,ಈ ಭಾರಿಯೂ ವಾಡಿಕೆ ಮಳೆ


ರಾಜ್ಯ ಕರಾವಳಿ ಭಾಗಕ್ಕೆ ಒಂದು ತಿಂಗಳೊಳಗೆ ಮುಂಗಾರು ಪ್ರವೇಶ ಪಡೆಯುವ ಸಾಧ್ಯತೆ ಇದ್ದು, ಈ ಬಾರಿ ವಾಡಿಕೆ ಅಥವಾ ವಾಡಿಕೆಗಿಂತ ಅಧಿಕ ಮಳೆ ನಿರೀಕ್ಷಿಸಲಾಗಿದೆ. 

ಕೇಂದ್ರ ಹವಾಮಾನ ಇಲಾಖೆ ರೈತರಿಗೆ ಸಿಹಿಸುದ್ದಿ ನೀಡಿದ್ದು, ಈ ಬಾರಿಯ ನೈಋತ್ಯ ಮುಂಗಾರು ಮಳೆ ಕೊಂಚ ಮುಂಚಿತವಾಗಿಯೇ ಆಗಮಿಸಲಿದೆ ಎಂದು ಮಾಹಿತಿ ನೀಡಿದೆ.

ಹೌದು.. ಈ ಕೇಂದ್ರ ಹವಾಮಾನ ಇಲಾಖೆ ಶನಿವಾರ ಮಾಹಿತಿ ನೀಡಿದ್ದು, ವಾಡಿಕೆಯಂತೆ ಕೇರಳಕ್ಕೆ ಜೂನ್ 1ರಂದು ಮಳೆ ಕಾಲಿಡುತ್ತದೆ. ಆದರೆ ಈ ಬಾರಿ ಮುಂಗಾರು ಮಾರುತಗಳು 4 ದಿನಗಳ ಕಾಲ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶ ಮಾಡಲಿದೆ ಎಂದು ಹೇಳಿದೆ.

ಜೂನ್ 1 ರ ಸಾಮಾನ್ಯ ದಿನಾಂಕಕ್ಕಿಂತ ಮುಂಚಿತವಾಗಿ, ಅಂದರೆ ಮೇ 27 ರಂದು ನೈಋತ್ಯ ಮಾನ್ಸೂನ್ ಕೇರಳವನ್ನು ತಲುಪುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಈ ಹಿಂದೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಏಪ್ರಿಲ್‌ನಲ್ಲಿ 2025 ರ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಸಂಚಿತ ಮಳೆಯನ್ನು ಮುನ್ಸೂಚನೆ ನೀಡಿತ್ತು, ಇದು ಭಾರತೀಯ ಉಪಖಂಡದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯೊಂದಿಗೆ ಸಂಬಂಧಿಸಿದ ಎಲ್ ನಿನೊ ಪರಿಸ್ಥಿತಿಗಳ ಸಾಧ್ಯತೆಯನ್ನು ತಳ್ಳಿಹಾಕಿತು.

16 ವರ್ಷಗಳಲ್ಲಿ ಇದೇ ಮೊದಲು

ನಿರೀಕ್ಷೆಯಂತೆ ಮಾನ್ಸೂನ್ ಕೇರಳಕ್ಕೆ ಆಗಮಿಸಿದರೆ, ಐಎಂಡಿ ದತ್ತಾಂಶದ ಪ್ರಕಾರ, 2009 ರಲ್ಲಿ ಮೇ 23 ರ ಬಳಿಕ ಇದೇ ಮೊದಲ ಬಾರಿಗೆ ಭಾರತದ ಮುಖ್ಯ ಭೂಭಾಗದಲ್ಲಿ ಮುಂಗಾರು ಮಾರುತಗಳು ಬೇಗನೆ ಪ್ರವೇಶ ಮಾಡುತ್ತಿವೆ.

ಸಾಮಾನ್ಯವಾಗಿ, ನೈಋತ್ಯ ಮಾನ್ಸೂನ್ ಜೂನ್ 1 ರ ವೇಳೆಗೆ ಕೇರಳದ ಮೇಲೆ ಪ್ರಾರಂಭವಾಗಲಿದೆ ಮತ್ತು ಬಳಿಕ ಜುಲೈ 8 ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಇದು ಸೆಪ್ಟೆಂಬರ್ 17 ರ ಸುಮಾರಿಗೆ ವಾಯುವ್ಯ ಭಾರತದಿಂದ ಹಿಮ್ಮೆಟ್ಟಲು ಪ್ರಾರಂಭಿಸುತ್ತದೆ ಮತ್ತು ಅಕ್ಟೋಬರ್ 15 ರ ವೇಳೆಗೆ ಸಂಪೂರ್ಣವಾಗಿ ಹಿಮ್ಮೆಟ್ಟುತ್ತದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜೂನ್ ನಿಂದ ಸೆಪ್ಟೆಂಬರ್ ವರೆಗೆ ನಾಲ್ಕು ತಿಂಗಳ ಮುಂಗಾರು ಋತುವಿನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿಯ ಸರಾಸರಿ 87 ಸೆಂ.ಮೀ. ಮಳೆಯ ಶೇ. 105 ರಷ್ಟು (ಶೇ. 5 ರಷ್ಟು ಮಾದರಿ ದೋಷದೊಂದಿಗೆ) ಸಂಚಿತ ಮಳೆಯಾಗಿದೆ" ಎಂದು ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ. ರವಿಚಂದ್ರನ್ ಹೇಳಿದ್ದಾರೆ.


ಕರಾವಳಿ ಭಾಗದಲ್ಲಿ ಈಗಾಗಲೇ ಉತ್ತಮ ಬೇಸಗೆ ಮಳೆ ಸುರಿಯುತ್ತಿದ್ದು, ಇದೇ ರೀತಿ ಮುಂದುವರೆದು ಮೇ ಅಂತ್ಯ ಅಥವಾ ಜೂನ್ ಮೊದಲ ವಾರ ಕೇರಳಕ್ಕೆ ಮುಂಗಾರು ಪ್ರವೇಶಿಸಿ ಕರ್ನಾಟಕ ಕರಾವಳಿ ತೀರಕ್ಕೆ ಆಗಮಿಸುವ ಸಾಧ್ಯತೆ ಇದೆ. ವಾಡಿಕೆ ಮುಂಗಾರಿಗೆ ಸಮರ್ಪಕ ವಾತಾವರಣ, ಗಾಳಿ, ಮೋಡಗಳು ಸೃಷ್ಟಿಯಾಗುತ್ತಿದ್ದು, ಪೂರ್ವ ಮುಂಗಾರು ಮಳೆ ಕೊನೆಗೊಳ್ಳುವ ಸಂದರ್ಭದಲ್ಲಿ ಮಾನ್ಸೂನ್ ಮಳೆ ತರುವ ಮೋಡಗಳು ಭೂ ಮಧ್ಯ ರೇಖೆಯ ಮುಖೇನ ಬಂದು ಬಾನಂಗಳದಲ್ಲಿ ಶೇಖರಣೆಯಾಗಲಿದೆ. ಇದರಿಂದಾಗಿ ಈ ವರ್ಷವೂ ವಾಡಿಕೆಗೂ ಅಧಿಕ ಮಳೆಯಾಗಬಹುದು.

ಕರಾವಳಿ ಭಾಗದಲ್ಲಿ ಐದು ವರ್ಷಗಳ ಬಳಿಕ 2024ರಲ್ಲಿ ದಾಖಲೆಯ ಮುಂಗಾರು ಮಳೆ ಸುರಿದಿತ್ತು. ಕಳೆದ ವರ್ಷ 3101 ໖.. 2 2 3736 ໖.. ಮಳೆಯಾಗಿತ್ತು. ದ.ಕ. ಜಿಲ್ಲೆಯಲ್ಲಿ ಶೇ.11, ಉಡುಪಿ ಜಿಲ್ಲೆಯಲ್ಲಿ ಶೇ.13 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.31ರಷ್ಟು ಮಳೆ ವಾಡಿಕೆಗಿಂತ ಅಧಿಕ ಸುರಿದಿದೆ. ಒಟ್ಟಾರೆ ಕರಾವಳಿ ಭಾಗದಲ್ಲಿ ಶೇ.20ರಷ್ಟು ಅಧಿಕ ಸುರಿದಿತ್ತು. 
ಪೂರ್ವ ಮುಂಗಾರಿಗೆ ವೇಗ 
ಈ ತಿಂಗಳಾಂತ್ಯಕ್ಕೆ ಪೂರ್ವ ಮುಂಗಾರು ಅವಧಿ ಪೂರ್ಣಗೊಳ್ಳುತ್ತಿದ್ದು, ಈಗಾಗಲೇ ವಾಡಿಕೆಗಿಂತ ಅಧಿಕ ಮಳೆ ಸುರಿದಿದೆ. ಮಾರ್ಚ್ ತಿಂಗಳಿನಿಂದ ಮೇ 8ರವರೆಗೆ ರಾಜ್ಯದ ದಕ್ಷಿಣ ಒಳನಾಡು (ಶೇ.43), ಉತ್ತರ ಒಳನಾಡು (ಶೇ.38), ಮಲೆನಾಡು (ಶೇ.44), ಕರಾವಳಿಯಲ್ಲಿ (ಶೇ.63) ರಷ್ಟು ಮಳೆ ಏರಿಕೆ ಕಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.72, ಉಡುಪಿ ಜಿಲ್ಲೆಯಲ್ಲಿ ಶೇ.77 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.49ರಷ್ಟು ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಅಧಿಕ ಸುರಿದಿದೆ. 

ಸದ್ಯದಲ್ಲೇ ಇನ್ನೊಂದು ವರದಿ 
ಉತ್ತಮ ಮಳೆ ಸುರಿಯುವ ಸಾಧ್ಯತೆಯನ್ನು ಕೆಲ ದಿನಗಳ ಹಿಂದೆ ವರದಿಯಲ್ಲಿ ಭಾರತೀಯ ಹವಾಮಾನ ಇಲಾಖೆಯು ತಿಳಿಸಿತ್ತು. ಅದರಲ್ಲಿ ವಾಡಿಕೆ ಅಥವಾ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆಯನ್ನು ಹೇಳಲಾಗಿತ್ತು. ಆದರೆ, ಈ ತಿಂಗಳಾಂತ್ಯಕ್ಕೆ ಮತ್ತೂಂದು ವರದಿಯನ್ನು ಐಎಂಡಿ ಬಿಡುಗಡೆಗೊಳಿಸಲಿದ್ದು, ಅದರಲ್ಲಿ ಪ್ರದೇಶಾವಾರು ಮಳೆ ವರದಿ ಅಂದಾಜು ತಿಳಿಯಬಹುದಾಗಿದೆ. 

ಕರಾವಳಿ ಸಹಿತ ರಾಜ್ಯದಲ್ಲಿ ಈ ಬಾರಿ ಉತ್ತಮ ಮುಂಗಾರು ಮಳೆ ಸುರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಹವಾಮಾನ ವಿಶ್ಲೇಷಣೆ ಬಿಡುಗಡೆ ಮಾಡಿದ್ದು, ಅದರಂತೆ ಈ ಬಾರಿಯ ಮುಂಗಾರು ಅವಧಿಯಲ್ಲಿ ವಾಡಿಕೆ ಅಥವಾ ವಾಡಿಕೆಗೂ ಅಧಿಕ ಮಳೆ ಸುರಿಯುವ ಸೂಚನೆ ನೀಡಿದೆ. 


ಡಾ| 
ರಾಜೇಗೌಡ,ಹವಾಮಾನ ತಜ್ಞರು,ಬೆಂಗಳೂರು

]]>
Sat, 10 May 2025 06:01:14 +0530 shivuagrico
Free mobile repair training&ಉಚಿತ ಊಟ ವಸತಿಯೊಂದಿಗೆ 1 ತಿಂಗಳ ಮೊಬೈಲ್ ರಿಪೇರಿ ತರಭೇತಿ https://krushirushi.in/Free-mobile-repair-training https://krushirushi.in/Free-mobile-repair-training Free mobile repair training-ಉಚಿತ ಊಟ ವಸತಿಯೊಂದಿಗೆ 1 ತಿಂಗಳ ಮೊಬೈಲ್ ರಿಪೇರಿ ತರಭೇತಿ

ಹಾವೇರಿ ಜಿಲ್ಲೆಯವರಿಗೆ ಮಾತ್ರ

ಉಚಿತ ಉಚಿತ ಉಚಿತ
*ಬ್ಯಾಂಕ್ ಆಫ್ ಬರೋಡ  ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ *"    ಮೊಬೈಲ್ ರೀಪೆರ್* "ತರಬೇತಿ ಯನ್ನು *ಜುಲೈ ತಿಂಗಳಲ್ಲಿ* ಹಮ್ಮಿಕೊಳ್ಳಲಾಗಿದೆ

 *ತರಬೇತಿಯಲ್ಲಿ* 
1)ಕೀ ಪ್ಯಾಡ್  ಐಂಡ್ರಾಯಿಡ್ ಮೊಬೈಲ್ ರೀಪೆರ 
2)  ಫವರ್, ವೊಲ್ಟೇಜ್,ಚಾರ್ಜಿಂಗ್,ಕ್ಯಾಮರ್,ಬ್ಯಾಟರಿ,ಡಿಸ್ಪ್ಲೆ,ಹ್ಯಾಂಗಿಂಗ್ ಪ್ರಾಬ್ಲಮ್ ಸೋಲುಶನ್
3)ರೀಸೆಟ್,ಸಾಪ್ಟವೇರ್ಸ,GPRS,wifi,GSM,MMC ಇತ್ಯಾದಿಗಳನ್ನು ಉಚಿತವಾಗಿ ಕಲಿಸುತ್ತೇವೆ

ತಮ್ಮ ಹೆಸರನ್ನು ಫೋನ್ ಮೂಲಕ ನೋಂದಾಯಿಸಿಕೊಳ್ಳಲು *8660219375* ನಂಬರ್ ಗೆ ಕಾಲ್ ಮಾಡಿ.

ಇದೇ ರೀತಿ ಬೇರೆ ಜಿಲ್ಲೆಗಳಲ್ಲೂ ಲೀಡ್ ಬ್ಯಾಂಕ್ ವತಿಯಿಂದ ತರಭೇತಿಗಳು ನಡೆಯುತ್ತವೆ,ಹೆಚ್ಚಿನ ಮಾಹಿತಿಗಾಗಿ ನಿಮ್ಮ ಜಿಲ್ಲೆಯ ಲೀಡ್ ಬ್ಯಾಂಕ್ ಸಂಪರ್ಕಿಸಿ

ಉಚಿತ ಊಟ ವಸತಿಯೊಂದಿಗೆ 13 ದಿನಗಳ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ-Free dairy and vermicompost training

ತರಭೇತಿ ಸ್ಥಳ

ರುಡ್‌ಸೆಟ್ ಸಂಸ್ಥೆ, ಧಾರವಾಡ 
Rural Development & Self Employment Training Institute, (RUDSET Institute) 
ಗಾಂಧಿನಗರ, ಧಾರವಾಡ-580 004 
Sponsors: SDME Trust & Canara Bank 
Phone: 9008448518 
ಉಚಿತ 13 ದಿನಗಳ 
ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ 


ಡಾ. ಡಿ. ವೀರೇಂದ್ರ ಹೆಗ್ಗಡೆ 
ಅಧ್ಯಕ್ಷರು, ರುಡ್‌ಸೆಟ್ ಸಂಸ್ಥೆಗಳು, ಧರ್ಮಸ್ಥಳ 

ತರಭೇತಿ ದಿನಾಂಕ
25-05-2025 80 06.06.2025 


ತರಬೇತಿಗೆ ಸೇರಬಯಸುವವರು 
1. ಅಭ್ಯರ್ಥಿಯು ಗ್ರಾಮೀಣ ಭಾಗದ ಬಿಪಿಎಲ್ ಅಥವಾ ಅಂತ್ಯೋದಯ ಕಾರ್ಡ ಹೊಂದಿರಬೇಕು ಅಥವಾ ಎನ್‌ಆರ್‌ಇಜಿ ಕಾರ್ಡ ಹೊಂದಿರಬೇಕು. 
2. 19 ರಿಂದ 45 ವಯಸ್ಸಿನ ಒಳಗಿರಬೇಕು. 
3. ಈ ತರಬೇತಿ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದೆ. 
ಹೆಸರು ನೋಂದಾಯಿಸಲು ಈ ಮೋಬೈಲ್ ನಂಬರ್ ಗೆ ಫೋನ್ ಮಾಡಿ 
9008448518 & 9743186978 
ಫೋನ್ ಮಾಡುವ ಸಮಯ ಮುಂಜಾನೆ 10 ರಿಂದ ಸಂಜೆ 6 ರ ವರೆಗೆ

ತರಬೇತಿಯಲ್ಲಿ ಕಲಿಸುವ ವಿಷಯಗಳು:: 
1. ಹೈನುರಾಸುಗಳ ತಳಿಗಳು (Dairy breeds)
2. ರೋಗಗಳು ಮತ್ತು ಅದರ ಲಕ್ಷಣಗಳು(Disease and their symptoms)
3. ರೋಗಗಳನ್ನು ತಡೆಗಟ್ಟುವ ಕ್ರಮಗಳು(controlling measures)
4. ಕೃತಕ ಗರ್ಭಧಾರಣೆ (Artificial Insemination)
5. ಮೇವಿನ ವಿಷಯಗಳು(Fodder)
6. ಎರೆಹುಳು ಗೊಬ್ಬರ ತಯಾರಿಕೆ (Vermicompost)
7. ಎರೆಹುಳು ನಿರ್ವಹಣೆ(Vermicompost management)
8. ಸಾವಯುವ ಕೃಷಿ ಪದ್ಧತಿಯ ಅರಿವು (Importantance of organic farming)
9. ಸಮಯದ ನಿರ್ವಹಣೆ, ಸ್ವ ಉದ್ಯೋಗದ ಮಹತ್ವ, ಸಂವಹನ ಕೌಶಲ್ಯ, ಬ್ಯಾಂಕಿಂಗ್ ವಿಷಯ ಮತ್ತು ಇನ್ನೂ ಇತರೆ ವಿಷಯಗಳ ಬಗ್ಗೆ ತಿಳುವಳಿಕೆ ನೀಡಲಾಗುವುದು.(Bank and subsidy schemes) ಇನ್ನು ಇತರೆ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು 

Free bike repair training-ಉಚಿತ ಊಟ ವಸತಿಯೊಂದಿಗೆ ಬೈಕ್ ರಿಪೇರಿ ತರಬೇತಿ

Free CCTV Installation and repair training-ಉಚಿತ ಊಟ ವಸತಿಯೊಂದಿಗೆ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿ

Free tailoring training-ಉಚಿತ ಊಟ ವಸತಿಯೊಂದಿಗೆ ಹೊಲಿಗೆ ಯಂತ್ರ ತರಭೇತಿ


ಉಚಿತ ಉಚಿತ ಉಚಿತ
*ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ ಮಹಿಳೆಯರ ಉಚಿತ ಹೊಲಿಗೆ ತರಬೇತಿಯನ್ನು ದಿನಾಂಕ 2.6.2025 ರಿಂದ 2.7.2025  ರ ವರೆಗೆ 31 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ* 

ಹಾವೇರಿ ಜಿಲ್ಲೆಯ  ಗ್ರಾಮೀಣ ಭಾಗದ BPL ರೇಷನ್ ಕಾರ್ಡ ಹೊಂದಿದ 18-45 ವಯಸ್ಸಿನ ನಿರುದ್ಯೋಗಿ ಯುವತಿಯರಿಗೆ ಅವಕಾಶವಿದೆ.
 *ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ.*
ತರಬೇತಿಯಲ್ಲಿ ಕಲಿಸುವ ವಿಷಯಗಳು 
ಕಟೋರಿ ಬ್ಲೌಸ್
ಪ್ರಿನ್ಸೆಸ್ ಕಟ್ ಬ್ಲೌಸ್ 
ಬೋಟ್ ನೆಕ್ ಬ್ಲೌಸ್ 
ಸಾದಾ ಬ್ಲೌಸ್
ಹೈ ನೆಕ್ ಬ್ಲೌಸ್
V ನೆಕ್ ಬ್ಲೌಸ್ 
ಫುಲ್ ಸ್ಲೀವ್ ಬ್ಲೌಸ್ ಹೊಲಿಯುವುದು 
ಚೂಡಿದಾರ್ ಹೊಲಿಯುವುದು 
ಸಣ್ಣ ಮಕ್ಕಳ ಬಟ್ಟೆ ಹೊಲಿಯುವುದು 
ಯೂನಿಫಾರ್ಮ್
ಲಾಂಗ್ ಗೌನ್ ಹೊಲಿಯುವುದು
ಕ್ರಾಪ್ ಟಾಪ್ ಹೊಲಿಯುವುದು
ನೈಟ್ ಡ್ರೆಸ್ ಹೊಲಿಯುವುದು
ಮುಂತಾದವುಗಳನ್ನು ಉಚಿತವಾಗಿ ಕಲಿಸುತ್ತೇವೆ..

ತಮ್ಮ ಹೆಸರನ್ನು ಫೋನ್ ಮೂಲಕ ನೋಂದಾಯಿಸಿಕೊಳ್ಳಲು *8660219375* ನಂಬರ್ ಗೆ ಕಾಲ್ ಮಾಡಿ.

]]>
Fri, 09 May 2025 13:12:34 +0530 shivuagrico
India&pak war Updates&ಪಾಕಿಸ್ತಾನ ಪ್ರಧಾನಿ ಪರಾರಿ,ಸೇನಾ ಮುಖ್ಯಸ್ಥ ಕಿಕೌಟ್,ಲಾಹೋರ್ ಸರ್ವನಾಶ,ಭಾರತೀಯ ಸೇನೆಯ ಅರ್ಭಟಕ್ಕೆ ಪತರಗುಟ್ಟಿದ ಪಾಪಿಸ್ಥಾನ https://krushirushi.in/India-pak-war-Updates- https://krushirushi.in/India-pak-war-Updates- India-pak war Updates-ಪಾಕಿಸ್ತಾನ ಪ್ರಧಾನಿ ಪರಾರಿ,ಸೇನಾ ಮುಖ್ಯಸ್ಥ ಕಿಕೌಟ್,ಲಾಹೋರ್ ಸರ್ವನಾಶ,ಭಾರತೀಯ ಸೇನೆಯ ಅರ್ಭಟಕ್ಕೆ ಪತರಗುಟ್ಟಿದ ಪಾಪಿಸ್ಥಾನ

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧೋನ್ಮಾದ ಹೆಚ್ಚಾಗಿದೆ. ದಾಳಿ-ಪ್ರತಿದಾಳಿ ಜೋರಾಗಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ನಡೆಸಿದ ಕ್ಷಿಪಣಿ, ಡ್ರೋನ್​ಗಳನ್ನು ಹೊಡೆದುರಳಿಸುವಲ್ಲಿ ಭಾರತ ಯಶಸ್ವಿಯಾಗಿದೆ. ಪಾಕಿಸ್ತಾನದ ಪ್ರಮುಖ ನಗರ ಮೇಲೆ ಕ್ಷಿಪಣಿಗಳ ದಾಳಿ ನಡೆಸಿದೆ.

https://x.com/mrsinha_/status/1920512881101013263?s=46

ಪಹಲ್ಗಾಮ್​​ನಲ್ಲಿ 26 ಅಮಾಯಕರನ್ನು ಕೊಂದಿದ್ದಕ್ಕೆ ಪ್ರತೀಕಾರವಾಗಿ ಉಗ್ರರ ನೆಲೆಗಳನ್ನು 'ಆಪರೇಷನ್ ಸಿಂದೂರ' ಮೂಲಕ ದಿಟ್ಟ ತಿರುಗೇಟು ನೀಡಿದ್ದ ಭಾರತಕ್ಕೆ ಪ್ರತ್ಯುತ್ತರ ನೀಡಲು ಮುಂದಾದ ಪಾಕಿಸ್ತಾನಕ್ಕೆ ಮತ್ತೆ ತಕ್ಕ ಉತ್ತರ ನೀಡಿದೆ. ಪಾಕ್​ನ ಎಫ್​​-16, ಜೆಎಫ್​-17 ಯುದ್ಧ ವಿಮಾನಗಳನ್ನು ಭಾರತೀಯ ಸೇನೆ ಹೊಡೆದು ಉರುಳಿಸಿ ಮತ್ತೊಂದು ಯಶಸ್ಸು ಕಂಡಿದೆ.

ಆಪರೇಷನ್ ಸಿಂದೂರದ ಬಳಿಕ ಜಮ್ಮು-ಕಾಶ್ಮೀರದ ಫೂಂಚ್ ಸೇರಿದಂತೆ ಗಡಿ ಭಾಗದ ಹಲವು ಗ್ರಾಮಗಳಲ್ಲಿ ಗುಂಡಿನ ದಾಳಿ ನಡೆಸಿದ್ದ ಪಾಕಿಸ್ತಾನದ ಸೇನೆ 16 ಜನರನ್ನು ಕೊಂದಿತ್ತು. ಅನೇಕರು ಗಾಯಗೊಂಡಿದ್ದರು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಪ್ರಮುಖ ನಗರಗಳ ಮೇಲೆ ಭಾರತ ಡ್ರೋನ್ ದಾಳಿ ನಡೆಸಿತ್ತು. ಅದಕ್ಕೆ ಸುಮ್ಮನಾಗದ ಪಾಕ್ ಮಿಸೈಲ್, ಡ್ರೋನ್ ಮತ್ತು ಜೆಟ್​​ಗಳ ಮೂಲಕ ಪ್ರತ್ಯುತ್ತರಕ್ಕೆ ಮುಂದಾಯಿತಾದರೂ ಅವೆಲ್ಲವನ್ನೂ ಭಾರತ ಹೊಡೆದುರುಳಿಸಿ ತಮ್ಮ ಶಕ್ತಿಯನ್ನು ಪ್ರದರ್ಶಿಸಿದೆ. ಇದೇ ವೇಳೆ ಎಫ್​​-16 ವಿಮಾನದ ಪೈಲೈಟ್​ನನ್ನು ವಶಕ್ಕೆ ಪಡೆದಿದೆ ಭಾರತದ ಸೇನೆ. ಭಾರತ ಕೊಟ್ಟಿರುವ ಏಟ್ಟಿಗೆ ಸುಸ್ತಾಗಿರುವ ಪಾಕ್, ಅಲ್ಲೋಲ ಕಲ್ಲೋಲವಾಗಿದೆ. ಪಾಕ್​ಗೆ ಸುಧಾರಿಸಿಕೊಳ್ಳಲು ಸಮಯವೇ ನೀಡದೆ ಪ್ರಮುಖ ನಗರಗಳ ಮೇಲೆ ದಾಳಿ ಮುಂದುವರೆಸಿದೆ.

https://x.com/mrsinha_/status/1920544212363149604?s=46

ಪಾಕಿಸ್ತಾನ ಪ್ರಧಾನಿ ಪರಾರಿ, ಸೇನಾ ಮುಖ್ಯಸ್ಥ ಕಿಕೌಟ್

ಪಾಕಿಸ್ತಾನ ಮತ್ತೆ ಮತ್ತೆ ಭಾರತದ ಮೇಲೆ ದಾಳಿ ನಡೆಸುತ್ತಿದ್ದಕ್ಕೆ ತಕ್ಕ ಪಾಠ ಕಲಿಸಲು ಮುಂದಾಗಿರುವ ಭಾರತದ ಮಿಸೈಲ್​ಗಳು ಪಾಕಿಸ್ತಾನದೊಳಗೆ ನುಗ್ಗಿವೆ. ಲಾಹೋರ್, ಇಸ್ಲಮಾಬಾದ್ ಸೇರಿದಂತೆ ಹಲವೆಡೆ ವೈಮಾನಿಕ ದಾಳಿ ನಡೆಸಿದೆ. ಇಸ್ಲಾಮಾಬಾದ್​ನಲ್ಲಿ ಪ್ರಧಾನಿ ನೆಲೆಸಿರುವ 20 ಕಿಲೋ ಮೀಟರ್​ ದೂರದಲ್ಲೇ ಭಾರತದ ವೈಮಾನಿಕ ದಾಳಿಗೆ ಹೆದರಿದ ಪ್ರಧಾನಿ ಷಹಬಾಜ್ ಷರೀಪ್ ಪರಾರಿಯಾಗಿದ್ದಾರೆ. ಅವರು ಬಂಕರ್​​ನಲ್ಲಿ ಅಡಗಿ ಕುಳಿತಿದ್ದಾರೆ ಎಂದು ಹೇಳಲಾಗಿದೆ. ಇದು ಒಂದು ಕಡೆಯಾದರೆ, ಮತ್ತೊಂದು ಕಡೆ ಪಾಕ್ ಸೇನಾ ಮುಖ್ಯಸ್ಥ ಸೈಯದ್ ಅಸಿಮ್ ಮುನೀರ್ ಅಹ್ಮದ್ ಷಾ ತಮ್ಮ ಸ್ಥಾನದಿಂದ ಕಿಕೌಟ್​​ ಮಾಡಲಾಗಿದೆಯಂತೆ, ನೂತನ ಮುಖ್ಯಸ್ಥನ ನೇಮಕಕ್ಕೂ ಚರ್ಚೆ ನಡೆಯುತ್ತಿದೆ ಎಂದು ಹೇಳಲಾಗಿದೆ.

ಲಾಹೋರ್, ಕರಾಚಿ ಸರ್ವನಾಶ

ಭಾರತದ ಭಯಾನಕ ದಾಳಿಗೆ ಪತರಗುಟ್ಟಿದ ಪಾಕಿಸ್ತಾನ ಪಾಪರ್ ಆಗುವ ಹಂತಕ್ಕೆ ಬಂದಿದೆ. ಬ್ಯಾಕ್ ಟು ಬ್ಯಾಕ್ ವೈಮಾನಿಕ ದಾಳಿ ನಡೆಸಿದ ಹಿನ್ನೆಲೆ ಲಾಹೋರ್​ ಸಂಪೂರ್ಣ ಸರ್ವನಾಶವಾಗುವ ಹಂತಕ್ಕೆ ಹೋಗಿದೆ ಎಂದು ವರದಿಯಾಗಿದೆ. ಕರಾಚಿಯ 16 ಪ್ರದೇಶಗಳಲ್ಲಿ ನೇರ ದಾಳಿಯಾಗಿದೆ. ಕರಾಚಿಯ ದೊಡ್ಡ ಬಂದರಿನ ಮೇಲೂ ದೊಡ್ಡ ದಾಳಿಯಾಗಿದೆ.

https://x.com/mrsinha_/status/1920534008460419354?s=46

ಇದು ಪಾಕಿಸ್ತಾನಕ್ಕೆ ಹೆಚ್ಚು ಆದಾಯ ತಂದುಕೊಡುವ ರಾಜ್ಯವಾಗಿತ್ತು. ಇದೀಗ ಭಾರತದ ದಾಳಿಯ ಪೆಟ್ಟಿಗೆ ಕರಾಚಿ ಸರ್ವನಾಶವಾಗಿದ್ದು, ಆರ್ಥಿಕತೆಗೂ ದೊಡ್ಡ ಪೆಟ್ಟು ಬೀಳುವಂತೆ ಮಾಡಿದೆ. 1971ರ ನಂತರ ಇದೇ ಮೊದಲ ಬಾರಿಗೆ ಕರಾಚಿ ಮೇಲೆ ದಾಳಿಯಾಗಿದೆ. ಪಾಕ್​ನ 50 ಮಿಸೈನ್, 60 ಡ್ರೋನ್​ಗಳನ್ನು ಹೊಡೆದುರುಳಿಸಲಾಗಿದೆ. ಐಎನ್​​ಎಸ್​, ವಿಕ್ರಾಂತ್, ತೇಜಸ್ ದಾಳಿಗೆ ಎದುರಾಳಿ ದೇಶವು ಪೀಸ್ ಪೀಸ್ ಆಗಿದೆ. ಅಯ್ಯೋ ಯಾಕಾದರೂ ಭಾರತದ ವಿರುದ್ಧ ದಾಳಿ ನಡೆಸಿದೆವೋ ಎಂದು ಗೋಗರೆಯುವ ಹಂತಕ್ಕೆ ಬಂದಿದೆ.

https://x.com/DDNewslive/status/1920430089369432348?ref_src=twsrc%5Etfw%7Ctwcamp%5Etweetembed%7Ctwterm%5E1920430089369432348%7Ctwgr%5E1c91af2c2404c4b930c7a2e87924befb4a3f30a0%7Ctwcon%5Es1_c10&ref_url=http%3A%2F%2Fapi-news.dailyhunt.in%2F 

]]>
Fri, 09 May 2025 06:28:59 +0530 shivuagrico
Cyclone&ವಾಯುಭಾರ ಕುಸಿತ,ಈ ಜಿಲ್ಲೆಗಳಲ್ಲಿ ಭಾರಿ ಮಳೆ ಅಲರ್ಟ್ https://krushirushi.in/Cyclone-2080 https://krushirushi.in/Cyclone-2080 Cyclone-ವಾಯುಭಾರ ಕುಸಿತ,ಈ ಜಿಲ್ಲೆಗಳಲ್ಲಿ ಭಾರಿ ಮಳೆ ಅಲರ್ಟ್


ಉತ್ತರ ಪ್ರದೇಶದಿಂದ ತಮಿಳುನಾಡಿನವರೆಗೆ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 


ಹವಾಮಾನ ಇಲಾಖೆ ವರದಿಯ ಪ್ರಕಾರ, ವಾಯುಭಾರ ಕುಸಿತದಿಂದಾಗಿ ಬೆಳಗಾವಿ, ಬೀದ‌ರ್, ಧಾರವಾಡ, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. 


ಇನ್ನು ಸತತ ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಹಾಗೂ ಕರಾವಳಿಯ ಒಂದೆರಡು ಕಡೆ, ಉತ್ತರ ಕನ್ನಡದ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಕರಾವಳಿಯಲ್ಲಿ ಮೇ 11 ಅಥವಾ 12ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.


ಈಗಿನಂತೆ ಮಲೆನಾಡು ಭಾಗಗಳಲ್ಲಿ ಮೇ 11 ಅಥವಾ 12ರಿಂದ ಮತ್ತೆ ಮಳೆ ಪ್ರಾರಂಭವಾಗುವ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳ ಒಂದೆರಡು ಕಡೆ ಸಂಜೆ ಅಥವಾ ತುಂತುರು ಮಳೆಯ ಸಾಧ್ಯತೆಗಳಿದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ತುಂತುರು ಮಾತ್ರ ಇರಬಹುದು. 
ಈಗಿನಂತೆ ಮೇ 10ನೇ ತಾರೀಕಿನ ನಂತರ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ. 

2025ನೇ ಸಾಲಿನ ಮುಂಗಾರು ನಿರೀಕ್ಷೆಯಂತೆ ಸಮಯಕ್ಕೆ ಸರಿಯಾಗಿ ಅಂದರೆ ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಆಗಮಿಸುವ ವರದಿಗಳಿವೆ. 
ಮೇಲಿನ ಮೇ 12ರ ನಕ್ಷೆಯಲ್ಲಿ ಮುಂಗಾರು ರೀತಿಯ ಮಾರುತಗಳ ಚಲನೆಯನ್ನು ಗಮನಿಸಬಹುದು.

]]>
Thu, 08 May 2025 13:24:11 +0530 shivuagrico
ಕೊನೆಗೂ ಜಮಾ ಆಯ್ತು 3 ತಿಂಗಳ ಪೇಂಡಿಗ್ 6000 ರೂಪಾಯಿ ಗೃಹಲಕ್ಷ್ಮಿ ಹಣ&Gruhalakshmi pending amount https://krushirushi.in/Gruhalakshmi-pending-amount-2079 https://krushirushi.in/Gruhalakshmi-pending-amount-2079 ಕೊನೆಗೂ ಜಮಾ ಆಯ್ತು 3 ತಿಂಗಳ ಪೇಂಡಿಗ್ 6000 ರೂಪಾಯಿ ಗೃಹಲಕ್ಷ್ಮಿ ಹಣ-Gruhalakshmi pending amount

ಬಾಕಿ ಉಳಿದಿರುವ ಮೂರು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಒಟ್ಟಿಗೆ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನವರಿ, ಫೆಬ್ರವರಿ, ಮಾರ್ಚ್ ಈ ಮೂರು ತಿಂಗಳ ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.

ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್‌ ಖಾತೆಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. 

 

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Thu, 08 May 2025 06:26:31 +0530 shivuagrico
Operation Sindoor&ಭಾರತ&ಪಾಕಿಸ್ತಾನ ಯುದ್ದ ಆರಂಭ,ಪಾಕಿಸ್ತಾನದ ಮೇಲಿನ ವಾಯುದಾಳಿಯ ವೈರಲ್ ವಿಡಿಯೊ https://krushirushi.in/Operation-sindoor-2025 https://krushirushi.in/Operation-sindoor-2025  Operation Sindoor-ಭಾರತ-ಪಾಕಿಸ್ತಾನ ಯುದ್ದ ಆರಂಭ,ಪಾಕಿಸ್ತಾನದ ಮೇಲಿನ ವಾಯುದಾಳಿಯ ವೈರಲ್ ವಿಡಿಯೊ


ಭಾರತ- ಪಾಕಿಸ್ತಾನ ಯುದ್ಧ ಆರಂಭವಾಗಿದೆ. ಪಹಲ್ಲಾಮ್ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿದೆ. ಇದಕ್ಕೆ ' ' (Operation Sindoor) ಎಂದು ಹೆಸರಿಡಲಾಗಿದೆ. ಪಹಲ್ಲಾಮ್‌ನಲ್ಲಿ ನಡೆದ ಬರ್ಬರ ಭಯೋತ್ಪಾದಕ ದಾಳಿಯ ಸುಮಾರು ಎರಡು ವಾರಗಳ ನಂತರ ಈ ದಾಳಿಗಳು ನಡೆದಿವೆ. 

https://x.com/mrsinha_/status/1919891559165690161?s=46

2019ರಲ್ಲಿ ಪುಲ್ವಾಮಾ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತ್ಯಂತ ಭೀಕರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆ ಮಾಡಿದ್ದರು. ಏಪ್ರಿಲ್ 22 ರಂದು 26 ನಾಗರಿಕರನ್ನು ಬಲಿತೆಗೆದುಕೊಂಡ ಪಹಲ್ಲಾಮ್ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿದವು. ಭಯೋತ್ಪಾದಕ ದಾಳಿಗಳನ್ನು ಯೋಜಿಸಲಾಗುತ್ತಿದ್ದ ಮತ್ತು ನಿರ್ದೇಶಿಸಲಾಗುತ್ತಿದ್ದ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ನೆಲೆಗಳ ಮೇಲೆ ಭಾರತ ದಾಳಿ ಮಾಡಿತು.

'ಆಪರೇಷನ್‌ ಸಿಂಧೂ‌ರ್' ಎಂಬ ಸಂಕೇತನಾಮದಡಿಯಲ್ಲಿ ರಾತ್ರಿಯಿಡೀ ನಡೆದ ನಿಖರ ದಾಳಿಯಲ್ಲಿ ಒಟ್ಟು ಒಂಬತ್ತು ಸ್ಥಳಗಳನ್ನು ಗುರಿಯಾಗಿಸಲಾಗಿತ್ತು. 

https://x.com/mrsinha_/status/1919876739066425610?s=46

"ನಮ್ಮ ಕ್ರಮಗಳು ಕೇಂದ್ರೀಕೃತವಾಗಿವೆ, ನಿಖರವಾಗಿವೆ. ಯಾವುದೇ ಪಾಕಿಸ್ತಾನಿ ಮಿಲಿಟರಿ ಸೌಲಭ್ಯಗಳನ್ನು ನಾವು ಗುರಿಯಾಗಿಸಿಕೊಂಡಿಲ್ಲ. ಗುರಿಗಳ ಆಯ್ಕೆ ಮತ್ತು ದಾಳಿಯ ವಿಧಾನದಲ್ಲಿ ಭಾರತ ಗಣನೀಯ ಸಂಯಮವನ್ನು ಪ್ರದರ್ಶಿಸಿದೆ" ಎಂದು ಭಾರತ ಹೇಳಿದೆ. ''ಈ ದಾಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಲು ನಾವು ಬದ್ಧರಾಗಿದ್ದೇವೆ'' ಎಂದಿದೆ. 
ಕೋಟ್ಲಿ, ಮುರಿಯ್ಕೆ, ಬಹಾವಲ್ಪು‌ರ್ ಮತ್ತು ಮುಜಫರಾಬಾದ್‌ನಲ್ಲಿರುವ ತಾಣಗಳ ಮೇಲೆ ಭಾರತ ದಾಳಿ ಮಾಡಿದೆ ಎಂದು ಪಾಕಿಸ್ತಾನದ ಡಿಜಿ ಐಎಸ್‌ಪಿಆ‌ರ್, ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್‌ ಚೌಧರಿ ಹೇಳಿದರು. ಮುರಿಡೈ ಹಫೀಜ್ ಸಯೀದ್‌ ನಡೆಸುತ್ತಿರುವ ಭಯೋತ್ಪಾದಕ ಗುಂಪಿನ ಲಷ್ಕರ್-ಎ-ತೈಬಾದ ಪ್ರಧಾನ ಕಚೇರಿಯಾಗಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹಲ್ವಾಪುರವು ಮಸೂದ್ ಅಜ‌ರ್ ನಡೆಸುತ್ತಿರುವ ಜೈಶ್-ಎ-ಮೊಹಮ್ಮದ್‌ನ ನೆಲೆಯಾಗಿದೆ. 

https://x.com/mrsinha_/status/1919894286901928295?s=46

]]>
Wed, 07 May 2025 05:58:40 +0530 shivuagrico
Mansoon rain 2025&ಈ ಭಾರಿ ಮೇ 13ರಿಂದಲೇ ಮನ್ಸೂನ್ ಪ್ರಾರಂಭ,ಮುಂದಿನ 4 ತಿಂಗಳು 1000 ಮೀ.ಮೀ ಮಳೆ https://krushirushi.in/Mansoon-rain-2025 https://krushirushi.in/Mansoon-rain-2025 Mansoon rain 2025-ಈ ಭಾರಿ ಮೇ 13ರಿಂದಲೇ ಮನ್ಸೂನ್ ಪ್ರಾರಂಭ,ಮುಂದಿನ 4 ತಿಂಗಳು 1000 ಮೀ.ಮೀ ಮಳೆ

ನೈಋತ್ಯ ಮಾನ್ಸೂನ್ ಮೇ 13 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಂಡಮಾನ್ ಸಮುದ್ರದ ಕೆಲವು ಭಾಗಗಳನ್ನು ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಅಂದಾಜಿಸಿದೆ.


ಮಾನ್ಸೂನ್ ಸಾಮಾನ್ಯವಾಗಿ ಜೂನ್ 1 ರ ಸುಮಾರಿಗೆ ಕೇರಳಕ್ಕೆ ಮುನ್ನಡೆಯುತ್ತದೆ ಮತ್ತು ಉತ್ತರದ ಕಡೆಗೆ ಸಾಗುತ್ತದೆ.

ಜುಲೈ 15 ರ ಸುಮಾರಿಗೆ ಇಡೀ ದೇಶವನ್ನು ಆವರಿಸುತ್ತದೆ, ಇದು ಸಾಮಾನ್ಯ ಪ್ರವೃತ್ತಿಯಾಗಿದೆ. ಆದರೆ ಈ ವರ್ಷ ಮಾನ್ಸೂನ್ ನಿರೀಕ್ಷೆಗಿಂತ ಮೊದಲೇ ಆಗಮಿಸುತ್ತದೆ ಎಂದು ತೋರುತ್ತದೆ.

ಐಎಂಡಿ ಅಂದಾಜಿಸಿದಂತೆ ಮೇ 25 ರ ವೇಳೆಗೆ ಕೇರಳ ತೀರಕ್ಕೆ ಮಾನ್ಸೂನ್ ಆಗಮಿಸುತ್ತದೆ ಎಂದು ಅಂದಾಜಿಸಲಾಗಿದೆ, ಇದು ಜೂನ್ 1 ರ ಸಾಮಾನ್ಯ ದಿನಾಂಕಕ್ಕಿಂತ ಮುಂಚೆಯೇ ಇರುತ್ತದೆ. ಆದಾಗ್ಯೂ, ಹಿಂದಿನ ದತ್ತಾಂಶಗಳು ಅಂಡಮಾನ್ ಸಮುದ್ರದ ಮೇಲೆ ಮಾನ್ಸೂನ್ ಆಗಮನದ ದಿನಾಂಕಕ್ಕೂ ಕೇರಳದಲ್ಲಿ ಮಾನ್ಸೂನ್ ಆರಂಭದ ದಿನಾಂಕಕ್ಕೂ ಅಥವಾ ದೇಶದಾದ್ಯಂತ ಕಾಲೋಚಿತ ಮಾನ್ಸೂನ್ ಮಳೆಗೂ ಯಾವುದೇ ನೇರ ಸಂಬಂಧವಿಲ್ಲ ಎಂದು ಐಎಂಡಿ ಹೇಳುತ್ತದೆ.

ಕೆಳ ಉಷ್ಣವಲಯದ ಮಟ್ಟದಲ್ಲಿ ನೈಋತ್ಯ ದಿಕ್ಕುಗಳು ಬಲಗೊಳ್ಳುವುದರಿಂದ, ವಿವಿಧ ಪ್ರದೇಶಗಳಲ್ಲಿ ವ್ಯಾಪಕವಾದ ಮಳೆಯಾಗುವ ಮತ್ತು ನಿರಂತರ ಮೋಡ ಕವಿದ ವಾತಾವರಣ ಇರುತ್ತದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ನೈಋತ್ಯ ಮಾನ್ಸೂನ್ ಮೇ 13, 2025 ರ ಸುಮಾರಿಗೆ ದಕ್ಷಿಣ ಅಂಡಮಾನ್ ಸಮುದ್ರ, ಆಗ್ನೇಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳಿಗೆ ಮುನ್ನಡೆಯುವ ಸಾಧ್ಯತೆಯಿದೆ ಎಂದು ಹೇಳಿದೆ.

ಈ ಬಾರಿಯ ಮಳೆಗಾಲದಲ್ಲಿ ಭಾರತದಾದ್ಯಂತ ವಾಡಿಕೆಗಿಂತ ಶೇ. 105ರಷ್ಟು ಹೆಚ್ಚು ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮುಂಗಾರು ಮಾರುತಗಳು ಮೇ ತಿಂಗಳ ಕಡೆಯ ವಾರದಿಂದಲೇ ದಕ್ಷಿಣದ ಕೇರಳದ ಮೂಲದ ಭಾರತವನ್ನು ಪ್ರವೇಶಿಸಲಿವೆ ಎಂದು ಇಲಾಖೆ ತಿಳಿಸಿದೆ.

ಈ ಕುರಿತಂತೆ, ಮಾಧ್ಯಮಗಳಿಗೆ ಹೇಳಿಕೆಯನ್ನು ನೀಡಿರುವ ಕೇಂದ್ರ ಭೂಗರ್ಭ ಶಾಸ್ತ್ರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ. ರವೀಂದ್ರನ್ ಕೂಡ ಇದೇ ವಿಷಯವನ್ನು ತಿಳಿಸಿದ್ದಾರೆ. ಸೆಪ್ಟಂಬರ್ ಮಧ್ಯಭಾಗದವರೆಗೂ ಮುಂಗಾರು ಮಾರುತಗಳ ಪ್ರಭಾವ ಭಾರತದಾದ್ಯಂತ ಇರಲಿದೆ. ಸೆಪ್ಟಂಬರ್ ಮಧ್ಯಭಾಗದ ನಂತರ ಮಾರುತಗಳ ಪ್ರಮಾಣ ಕಡಿಮೆಯಾಗಲಿದೆ. ಆದರೆ ಅಲ್ಲಿಯವರೆಗೆ ಭಾರತದಾದ್ಯಂತ ಉತ್ತಮವಾಗಿ ಮಳೆ ಬೀಳಲಿದೆ ಎಂದು ಹೇಳಿದ್ದಾರೆ. ವಾಡಿಕೆಗಿಂತ ಹೆಚ್ಚು ಅಂದರೆ ಶೇ. 105ರಷ್ಟು ಮಳೆ ಬೀಳುವ ಮುನ್ಸೂಚನೆ ಸಿಕ್ಕಿರುವುದು ಕೃಷಿ ವಲಯಕ್ಕೆ ನಿಜಕ್ಕೂ ಶುಭ ಸಮಾಚಾರವೇ ಸರಿ ಎಂದು ಅವರು ತಿಳಿಸಿದ್ದಾರೆ.

ಹೆಚ್ಚು ಮಳೆ ಲೆಕ್ಕಾಚಾರ ಹೇಗೆ?

ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತದೋ, ಕಡಿಮೆ ಮಳೆಯಾಗುತ್ತದೋ ಎಂಬುದನ್ನು ಅಳೆಯಲು ಕೇಂದ್ರ ಹವಾಮಾನ ಇಲಾಖೆ (ಐಎಂಡಿ) ಒಂದು ಸಿದ್ಧ ಸೂತ್ರವನ್ನಿಟ್ಟುಕೊಂಡಿದೆ. ಯಾವುದೇ ವರ್ಷದಲ್ಲಿ ಮುಂಗಾರು ಮಳೆ ಎಷ್ಟಾಗಬಹುದು ಎಂಬ ಮಾಹಿತಿ ಉಪಗ್ರಹಗಳಿಂದ ಸಿಕ್ಕ ಕೂಡಲೇ ಅದನ್ನು ಆ ವರ್ಷದಿಂದ ಹಿಂದಕ್ಕೆ ಸುಮಾರು 50 ವರ್ಷಗಳ ಸರಾಸರಿ ಮುಂಗಾರು ಮಳೆಯ ಪ್ರಮಾಣಕ್ಕೆ ಹೋಲಿಕೆ ಮಾಡಲಾಗುತ್ತದೆ.

ಶೇ. 96ರಿಂದ 104ರವರೆಗಿನ ಅಂದಾಜಿನಲ್ಲಿ ಮಳೆ ಸುರಿಯುತ್ತದೆ ಎಂದಾದರೆ ಅದನ್ನು ಸಾಮಾನ್ಯ ಮುಂಗಾರು ಎಂದು ಪರಿಗಣಿಸುತ್ತದೆ. ಶೇ. 104ಕ್ಕಿಂತ ಹೆಚ್ಚು ಮಳೆಯಾಗುತ್ತದೆ ಎಂದರೆ ಅದು ಉತ್ತಮ ಮುಂಗಾರು ಎಂದು ಪರಿಗಣಿಸಲಾಗುತ್ತದೆ. 2025ರ ಮುಂಗಾರು ಮಳೆಯು ಶೇ. 105ರಷ್ಟಿರಲಿದೆ ಎಂಬ ಲೆಕ್ಕಾಚಾರ ಇರುವುದರಿಂದ ಈ ಬಾರಿ ಉತ್ತಮ ಮುಂಗಾರು ಸಾಧ್ಯವಿದೆ ಎಂದು ತಜ್ಞರು ಲೆಕ್ಕಾಚಾರ ಹಾಕಿದ್ದಾರೆ. ಈಗಾಗಲೇ ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿದೆ.

ಮುಂಗಾರು ಮಳೆಯ ಮಹತ್ವ

ಭಾರತದಂಥ ಸಮಶೀತೋಷ್ಣ ವಲಯದಲ್ಲಿರುವ ದೇಶಗಳಿಗೆ ಮುಂಗಾರು ಮಳೆ ಅತ್ಯಗತ್ಯವಾಗಿ ಬೇಕೇಬೇಕು. ಕೇವಲ ಕೃಷಿಗೆ ಮಾತ್ರವಲ್ಲ, ಕುಡಿಯುವ ನೀರು, ಜಲವಿದ್ಯುತ್ ತಯಾರಿಕೆಗೆ ಮುಂಗಾರು ಮಳೆಯೇ ಮೂಲ. ಭಾರತದಲ್ಲಿ ಒಟ್ಟು ಇರುವ ಕೃಷಿ ಭೂಮಿಯಲ್ಲಿ ಶೇ. 52ರಷ್ಟು ಭೂಮಿಯು ಮಳೆಯಾಧಾರಿತವಾಗಿದೆ. ಹಾಗಾಗಿ, ಮುಂಗಾರು ಮಳೆಯು ಉತ್ತಮವಾಗಿ ಸುರಿದರೆ ಮಳಯಾಧಾರಿತ ಕೃಷಿಗೆ ಹೆಚ್ಚು ಇಂಬು ನೀಡುತ್ತದೆ. ಜೊತೆಗೆ, ನದಿಗಳು, ಅಣೆಕಟ್ಟುಗಳು, ಕಾಲುವೆಗಳು ತುಂಬಿ ಆ ಮೂಲಕ ನೀರಾವರಿ ಭೂಮಿಯಲ್ಲೂ ಉತ್ತಮ ಫಸಲು ಸಿಗುತ್ತದೆ. ಈ ಬಾರಿ ಐಎಂಡಿ ಕೊಟ್ಟಿರುವ ಈ ಬಾರಿಯ ಮುಂಗಾರಿನ ವಿವರಗಳು ರೈತಾಪಿ ಜನರಲ್ಲಿ ಸಹಜವಾಗಿ ಖುಷಿ ತಂದಿದೆ.

ತಜ್ಞರಲ್ಲಿ ಕೊಂಚ ಆತಂಕ

ಉತ್ತಮವಾಗಿ ಮಳೆಯೇನೋ ಆಗುತ್ತದೆ ಎಂದು ಹವಾಮಾನ ಇಲಾಖೆ ಹೇಳಿದ್ದರೂ ಅಲ್ಲಿರುವ ತಜ್ಞರದ್ದು ಬೇರೆಯದ್ದೇ ಆತಂಕವಿದೆ. ಅದೇನೆಂದರೆ, ಮೇ ತಿಂಗಳ ಅಂತ್ಯದಿಂದ ಸೆಪ್ಟಂಬರ್ ಮಧ್ಯಭಾಗದವರೆಗೆ ಚಾಲ್ತಿಯಲ್ಲಿರುವ ಮುಂಗಾರು ಹಂತಹಂತವಾಗಿ ಮಳೆ ಸುರಿಸುತ್ತವೋ ಅಥವಾ ಕೆಲವು ದಿನಗಳ ಮಾತ್ರ ಭಾರೀ ಮಳೆ ಸೃಷ್ಟಿಸಿ ಅವಾಂತರ ಸೃಷ್ಟಿಸುತ್ತವೋ ಎಂಬ ಆತಂಕವಿದೆ. ಹಂತಹಂತವಾಗಿ ಬಿತ್ತನೆಗೆ ಎಷ್ಟು ಬೇಕೋ ಅಷ್ಟು ಸುರಿಯುತ್ತಾ ಹೋದರೆ ಚೆಂದ. ಆದರೆ, ಇಂದು ಮಳೆಬರುವುದು, ಆನಂತರ ಎರಡು ಮೂರು ವಾರ ಮಳೆಯ ಸುಳಿವಿಲ್ಲ. ಆನಂತರ ದಬದಬನೆ ಆಕಾಶಕ್ಕೆ ತೂತು ಬಿದ್ದಂತೆ ಧಾರಾಕಾರವಾಗಿ ಸುರಿಯುವುದು ಆದರೆ ರೈತರಿಗೆ ಕಷ್ಟವಾಗಬಹುದು ಎಂಬುದು ತಜ್ಞರ ಮಾತು. ಅದನ್ನು ನಿಖರವಾಗಿ ಮುಂದಿನ ದಿನಗಳಲ್ಲಿ ಅಳೆಯಲಾಗುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

https://vijaykarnataka.com/news/karnataka/karnataka-monsoon-rain-predictions-this-year-good-rain-in-state-farmers-are-happy/amp_videoshow/120891292.cms

]]>
Tue, 06 May 2025 21:46:49 +0530 shivuagrico
Pension amount status check&ಪಿಂಚಣೆ ಹಣ 1200 ರಿಂದ 2000 ಕ್ಕೆ ಹೆಚ್ಚಳ,ಎಲ್ಲಾ ರೀತಿಯ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Pension-amount-status-check-2076 https://krushirushi.in/Pension-amount-status-check-2076 Pension amount status check-ಪಿಂಚಣೆ ಹಣ 1200 ರಿಂದ 2000 ಕ್ಕೆ ಹೆಚ್ಚಳ

ಕೇಂದ್ರ ಸರ್ಕಾರ ಇತ್ತೀಚೆಗೆ ವಿಧವಾ ಪಿಂಚಣಿ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ, ಇದು ಲಕ್ಷಾಂತರ ಮಹಿಳೆಯರಿಗೆ ಪರಿಹಾರವನ್ನು ತರುತ್ತದೆ. ಈ ಹೆಚ್ಚಳದೊಂದಿಗೆ, ಪಿಂಚಣಿ ಮೊತ್ತವನ್ನು ಗಮನಾರ್ಹವಾಗಿ ಹೆಚ್ಚಿಸಲಾಗಿದ್ದು, ಇದರಿಂದಾಗಿ ಮಹಿಳೆಯರು ಉತ್ತಮ ಆರ್ಥಿಕ ಸಹಾಯವನ್ನು ಪಡೆಯಬಹುದು.

ವಿಧವಾ ಪಿಂಚಣಿ ಯೋಜನೆಯಡಿಯಲ್ಲಿ ಪಡೆಯುವ ಮೊತ್ತವನ್ನು ಮಹತ್ತರವಾಗಿ ಹೆಚ್ಚಿಸಲಾಗಿದೆ. ಮೊದಲು ಈ ಯೋಜನೆಯಲ್ಲಿ ತಿಂಗಳಿಗೆ 500 ರಿಂದ 1000 ರೂಪಾಯಿಗಳವರೆಗೆ ಸಿಗುತ್ತಿತ್ತು ಆದರೆ ಈಗ ಅದನ್ನು ತಿಂಗಳಿಗೆ 2000 ರಿಂದ 3000 ಕ್ಕೆ ಹೆಚ್ಚಿಸಲಾಗಿದೆ. ಇದರರ್ಥ ಮಹಿಳೆಯರು ಮೊದಲಿಗಿಂತ ಹೆಚ್ಚಿನ ಆರ್ಥಿಕ ಸಹಾಯವನ್ನು ಪಡೆಯಲು ಸಾಧ್ಯವಾಗುತ್ತದೆ, ಆದರೂ ಪ್ರತಿ ರಾಜ್ಯ ಸರ್ಕಾರವನ್ನು ಅವಲಂಬಿಸಿ ಮೊತ್ತವು ಸ್ವಲ್ಪ ಬದಲಾಗಬಹುದು. ಆದರೆ ಕೇಂದ್ರ ಸರ್ಕಾರದ ಶಿಫಾರಸಿನ ನಂತರ, ಇದನ್ನು ಅನೇಕ ರಾಜ್ಯಗಳಲ್ಲಿ ಜಾರಿಗೆ ತರಲಾಗಿದ್ದು, ಇದು ಮಹಿಳೆಯರ ಜೀವನವನ್ನು ಸ್ವಲ್ಪ ಸುಲಭಗೊಳಿಸುತ್ತದೆ.

ಪ್ರಮುಖ ಬದಲಾವಣೆಗಳು

ಪಿಂಚಣಿ ಮೊತ್ತ ₹1000 ದಿಂದ ₹2000 ಕ್ಕೆ ಏರಿಕೆ.
ಈಗ ನೀವು ಪ್ರತಿ ತಿಂಗಳು ₹2000 ರಿಂದ ₹3000 ಪಡೆಯುತ್ತೀರಿ.
ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ನಿಯಮಗಳು.

ಈ ಯೋಜನೆಯ ಲಾಭವನ್ನು ಯಾರು ಪಡೆಯಬಹುದು

ಮಹಿಳೆಯ ವಯಸ್ಸು 18 ವರ್ಷಗಳು ಆಗಿರಬೇಕು.
ಮಹಿಳೆಯ ವಾರ್ಷಿಕ ಆದಾಯವು ಸರ್ಕಾರ ನಿಗದಿಪಡಿಸಿದ ಮಿತಿಗಿಂತ ಕಡಿಮೆಯಿರಬೇಕು.
ಮಹಿಳೆಗೆ ಬೇರೆ ಯಾವುದೇ ಸರ್ಕಾರಿ ಪಿಂಚಣಿ ಯೋಜನೆಯ ಲಾಭ ಸಿಗಬಾರದು
ಮಹಿಳೆಯ ಹೆಸರಿನಲ್ಲಿ ಯಾವುದೇ ದೊಡ್ಡ ಆಸ್ತಿ ಅಥವಾ ಕೃಷಿ ಭೂಮಿ ಇರಬಾರದು.
ಈ ಷರತ್ತುಗಳನ್ನು ಪೂರೈಸುವ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬಹುದು.

ಪತಿಯ ಮರಣದ ನಂತರ ಆರ್ಥಿಕವಾಗಿ ದುರ್ಬಲರಾಗಿರುವ ಮತ್ತು ಉತ್ತಮ ಜೀವನ ನಡೆಸಲು ಸಹಾಯ ಬಯಸುವ ಮಹಿಳೆಯರಿಗಾಗಿ ಈ ಯೋಜನೆ ಇದೆ.

ಅರ್ಜಿ ಸಲ್ಲಿಸುವುದು ಹೇಗೆ?

ನೀವು ಈ ಯೋಜನೆಯ ಲಾಭ ಪಡೆಯಲು ಬಯಸಿದರೆ, ಅರ್ಜಿ ಸಲ್ಲಿಸುವುದು ತುಂಬಾ ಸುಲಭ. ನೀವು ಆನ್‌ಲೈನ್ ಮತ್ತು ಆಫ್‌ಲೈನ್ ಎರಡರಲ್ಲೂ ಅರ್ಜಿ ಸಲ್ಲಿಸಬಹುದು.

ರಾಜ್ಯಗಳಾದ್ಯಂತ ಪಿಂಚಣಿ ಮೊತ್ತ

ದೇಶದ ವಿವಿಧ ರಾಜ್ಯಗಳಲ್ಲಿ ಪಿಂಚಣಿ ಮೊತ್ತವು ಬದಲಾಗಬಹುದು. ಕೆಲವು ರಾಜ್ಯಗಳ ಪಿಂಚಣಿ ಮೊತ್ತದ ಬಗ್ಗೆ ಇಲ್ಲಿದೆ ಮಾಹಿತಿ

ರಾಜ್ಯ ಹಿಂದಿನ ಮೊತ್ತ (₹) ಹೊಸ ಮೊತ್ತ (₹)
ಉತ್ತರ ಪ್ರದೇಶ 500 1500₹
ಬಿಹಾರ 600 2000₹
ರಾಜಸ್ಥಾನ 750 2500₹
ಮಧ್ಯಪ್ರದೇಶ 1000 3000₹
ಹರಿಯಾಣ 1200 2500₹
ಮಹಾರಾಷ್ಟ್ರ 800 2000₹
ಕರ್ನಾಟಕ 900 2200₹

ಎಲ್ಲಾ ರೀತಿಯ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://dssp.karnataka.gov.in/dssp/villageWise_list_Of_beneficiaries.aspx

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಅಥವಾ ಪಟ್ಟಣ select ಮಾಡಿ, ಹೊಬಳಿ,ಗ್ರಾಮ select ಮಾಡಿ,Captch type ಮಾಡಿ, Search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿ ಪಿಂಚಣಿ ಪಡೆಯುವವರ ಹೆಸರು ಸಿಗಲಿದೆ

(ಸೂಚನೆ-Desktop mode open ಮಾಡಿಕೊಳ್ಳಿ)

Pension status-ಈ ತಿಂಗಳ ನಿಮ್ಮ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://dssp.karnataka.gov.in/dssp/Beneficiary_Status.aspx

ನಂತರ ನಿಮ್ಮ ಗ್ರಾಮದ ಪಟ್ಟಿಯಲ್ಲಿ ನಿಮ್ಮ beneficiary ID ಹಾಕಿ,captcha type ಮಾಡಿ search ಮೇಲೆ ಕ್ಲಿಕ್ ಮಾಡಿ

ನಂತರ click here to get payment details from SSP portal ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ beneficiary ID ಹಾಗೂ captcha code ಹಾಕಿ search ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಇಲ್ಲಿಯವರೆಗೆ ಜಮಾ ಆದ ಪಿಂಚಣೆ ಹಣ ಮಾಹಿತಿ ದೊರೆಯಲಿದೆ

ಹೀಗೂ ಚೆಕ್ ಮಾಡಬಹುದು

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ pension ಮೇಲೆ ಕ್ಲಿಕ್ ಮಾಡಿ

ನಂತರ ಇಲ್ಲಿಯವರೆಗೂ ಜಮಾ ಆದ ಪಿಂಚಣೆ ಹಣ(pension amount)ಮಾಹಿತಿ ಸಿಗಲಿದೆ.

]]>
Tue, 06 May 2025 06:17:28 +0530 shivuagrico
Bele vime&ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Bele-vime-2075 https://krushirushi.in/Bele-vime-2075 Bele vime-ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Mon, 05 May 2025 18:57:50 +0530 shivuagrico
Pmkisan 20th instalment& ಈ ದಿನ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ ಪಿಎಂ ಕಿಸಾನ್ 20ನೇ ಕಂತು https://krushirushi.in/Pmkisan-20th-instalment-2074 https://krushirushi.in/Pmkisan-20th-instalment-2074 Pmkisan 20th instalment-ಈ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ ಪಿಎಂ ಕಿಸಾನ್ 20ನೇ ಕಂತು

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬ‌ರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 20ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 20th instalment date

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Mon, 05 May 2025 06:09:17 +0530 shivuagrico
Karnataka weather report&ಈ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ https://krushirushi.in/Karnataka-weather-report-2073 https://krushirushi.in/Karnataka-weather-report-2073 Karnataka weather report-20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ

ಮೇ 7 ಬುಧವಾರದಿಂದ ಮೇ 10 ರವರೆಗೂ ಮಳೆಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ,ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ , ತುಮಕೂರು, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರು ಹವಾಮಾನ

ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಬಿರುಗಾಳಿಯೊಂದಿಗೆ (ಗಾಳಿಯ ವೇಗ 30-40 ಕಿಮೀ/ಗಂ) ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35°C ಮತ್ತು 21°C ಇರಲಿದೆ. ಮೇ 7 ಹಾಗೂ 8 ರಂದು ಬೆಂಗಳೂರಿಗೆ ಭಾರೀ ಮಳೆ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.

ಕರ್ನಾಟಕದಲ್ಲಿ ಕಲಬುರಗಿ ನಗರದಲ್ಲಿಯೇ ಅತ್ಯಧಿಕ ಉಷ್ಣಾಂಶ ದಾಖಲಾಗಿದೆ. ಇದಲ್ಲದೇ ವಿಜಯಪುರ, ಬೀದರ್‌ ಜಿಲ್ಲೆಯ ಉಷ್ಣಾಂಶ ಪ್ರಮಾಣವೂ ಅಧಿಕವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಪ್ರಮಾಣವು ಏರಿಕೆಯಾಗಿತ್ತು. ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾತ್ರ ತಾಪಮಾನವು ಗಮನಾರ್ಹ ಏರಿಕೆಯಾಗಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.


ಕರ್ನಾಟಕದಲ್ಲಿ ಮೇ ತಿಂಗಳ ಮೊದಲ ವಾರದಲ್ಲೂ ಬಹುತೇ ಕ ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದ್ದು, ಭಾನುವಾರದಂದು ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಿದೆ. ನಾಲ್ಕು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಮುನ್ಸೂಚನೆ ನೀಡಲಾಗಿದೆ.

ಬೇಸಿಗೆ ಕಾಲದ ಮಾರ್ಚ್‌, ಏಪ್ರಿಲ್‌ ನ ನಂತರ ಮೇ ತಿಂಗಳಲ್ಲೂ ಮಳೆ ಮುಂದುವರಿದಿದೆ. ಕರ್ನಾಟಕದಲ್ಲಿ ಭಾನುವಾರವೂ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ, ದಕ್ಷಿಣ ಕರ್ನಾಟಕ ಭಾಗದ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಕರ್ನಾಟಕದ ನಾಲ್ಕೈದು ಜಿಲ್ಲೆಗಳಲ್ಲಿ ಮಳೆಯಾಗಬಹುದು. ಆದರೆ ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು ಆಗೂ ಹಾಸನ ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಾತ್ರ ಭಾರೀ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲೂ ಗುಡುಗು ಸಹಿತ ಹಗುರ ಮಳೆಯಾಗಬಹುದು ಎನ್ನುವ ಸೂಚನೆಗಳಿವೆ. ಕಲಬುರಗಿ ಜಿಲ್ಲೆಯಲ್ಲಿ ಬಿಸಿಲ ಪ್ರಮಾಣ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದು. ಭಾನುವಾರ ಕಲಬುರಗಿ ಜಿಲ್ಲೆಯಲ್ಲೂ ಮಳೆಯಾಗಿ ವಾತಾವರಣ ತಂಪಾಗಿಸುವ ಲಕ್ಷಣಗಳಿವೆ.

ಮೇ 4ರ ಭಾನುವಾರದಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಬಹುದು. ಗುಡುಗು ಸಹಿತ ಮಳೆಯೂ ಸುರಿಯಬಹುದು. ಗಾಳಿಯ ವೇಗವೂ ಹೆಚ್ಚಿರಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯಲಿದೆ.

ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಮಧ್ಯಮಮಳೆಯಾಗಲಿದೆ. ಗುಡುಗು ಕೂಡ ಇರಲಿದೆ. ಬೀದರ್‌. ವಿಜಯಪುರ, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಕರ್ನಾಟಕದ ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಗುಡುಗು ಸಹಿತ ಆಗಬಹುದು. ಚಿಕ್ಕಮಗಳೂರು, ಬಳ್ಳಾರಿ, ಹಾಸನ, ಮಂಡ್ಯ, ಮೈಸೂರು, ಕೊಡಗು, ವಿಜಯನಗರ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಹಗುರ ಮಳೆಯಾಗಬಹುದು.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.ಹಗುರದಿಂದ ಮಧ್ಯಮ ಮಳೆ ಗುಡುಗು ಸಹಿತ ಬೆಂಗಳೂರಿನ ಕೆಲ ಪ್ರದೇಶದಲ್ಲಿ ಸುರಿಯಬಹುದು. ಗಾಳಿಯ ವೇಗವೂ ಇರಲಿದೆ. ಗರಿಷ್ಠ ಹಾಗ ಕನಿಷ್ಠ ತಾಪಮಾನವು ಬೆಂಗಳೂರು ಭಾಗದಲ್ಲಿ ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್‌ ಮತ್ತು 20 ಡಿಗ್ರಿ ಸೆಲ್ಸಿಯಸ್‌ ದಾಖಲಾಗಬಹುದು

ಕರ್ನಾಟಕದ ನಾನಾ ಭಾಗಗಳಲ್ಲಿ ಶುಕ್ರವಾರ ಹಾಗೂ ಶನಿವಾರವೂ ಮಳೆಯಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಅತ್ಯಧಿಕ ಮಳೆಯಾಗಿದೆ. ದಾವಣಗೆರೆ ನಗರ, ಚಿಕ್ಕಮಗಳೂರು, ಬೆಂಗಳೂರಿನ ಟಿಜಿಹಳ್ಳಿ, ಕೊಡಗಿನ ಸೋಮವಾರಪೇಟೆ, ಹಾವೇರಿ ಜಿಲ್ಲೆಯ ಹಿರೇಕೇರೂರು, ಶಿಗ್ಗಾಂವ್‌, ಶಿವಮೊಗ್ಗ ಜಿಲ್ಲೆಯ ತ್ಯಾಗರ್ತಿ, ಹುಂಚದಕಟ್ಟೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ, ಮಂಡ್ಯ ಜಿಲ್ಲೆಯ ನಾಗಮಂಗಲ, ಕೊಪ್ಪಳ ಜಲ್ಲೆಯ ಗಂಗಾವತಿ, ಮುನಿರಾಬಾದ್‌, ಯಲಬುರ್ಗಾ, ದಕ್ಷಿಣ ಕನ್ನಡದ ಬೆಳ್ತಂಗಡಿ, ಸುಳ್ಯ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ತರೀಕೆರೆ,ಜಯಪುರ, ಕೊಟ್ಟಿಗೆಹಾರ, ಮೈಸೂರು ಜಿಲ್ಲೆಯ ಎಚ್‌ಡಿಕೋಟೆ, ತುಮಕೂರು ಜಿಲ್ಲೆಯ ಕುಣಿಗಲ್‌, ಮಧುಗಿರಿ, ಕಿಬ್ಬನಹಳ್ಳಿ, ರಾಯಚೂರು ಜಿಲ್ಲೆಯ ಸಿಂಧನೂರ, ಹಾಸನ ಜಿಲ್ಲೆ ಅರಕಲಗೂಡು, ವಿಜಯಪುರ ನಗರ, ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ಬೆಟ್ಟ, ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಮಳೆಯಾಗಿದೆ.

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೊಡದ ವಾತಾವರಣ ಇರಬಹುದು.
ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 9ರಿಂದ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ.

ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾಯಚೂರು, ಯಾದಗಿರಿ ಜಿಲ್ಲೆಗಳ ಆಂದ್ರಾ ಗಡಿ ಭಾಗಗಳ ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. 
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮೇ 6ರ ನಂತರ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

]]>
Sun, 04 May 2025 17:04:20 +0530 shivuagrico
1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ&Dairy farming https://krushirushi.in/Dairy-farming-2072 https://krushirushi.in/Dairy-farming-2072 1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming 

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು(Cow) ಅಥವಾ ಎಮ್ಮೆ(Buffelow) ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್‌ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.


ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Vetarnary department schemes 2025-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?

ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ


ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.

ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.


ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು

ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.


ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.


ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.

ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.


ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.

ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.


ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahvs.karnataka.gov.in/info-2/Schemes+&+Benefits/kn

National livestock mission 2024-ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆ,ಕುರಿ,ಕೋಳಿ,ಮೇಕೆ,ಹಂದಿ ಸಾಕಾಣೆಕೆಗೆ ಅರ್ಜಿ ಆಹ್ವಾನ

ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ, ಮೇಕೆ, ಹಂದಿ ಸಾಕಾಣಿಕೆ ಮತ್ತು ರಸಮೇವು ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.

National livestock mission 


ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ

(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)


 ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.


 ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.

ಅವಶ್ಯಕ ದಾಖಲಾತಿಗಳು :-

1)ಆಧಾರ,

2)ಪಹಣಿ ಪತ್ರ

3)ಬ್ಯಾಂಕ್‌ಖಾತೆ ಸಂಖ್ಯೆ,

ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು

4)ಭಾವ ಚಿತ್ರ.



ಕ್ರ.ಸಂ 

ಘಟಕ 

ಸೌಲಭ್ಯಗಳ ವಿವರ

 

 ಹೈನುಗಾರಿಕೆ 

 

1

ಮಿಶ್ರತಳಿ ದನಗಳ ನಿರ್ವಹಣೆ (1+1)

ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ

 

ಆ. ಸುಧಾರಿತ ಎಮ್ಮೆಗಳ ನಿರ್ವಹಣೆ 
 (1+1)

ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ

 

 ಕುರಿ ಸಾಕಾಣಿಕೆ 

 

2

ಕುರಿಗಳ ನಿರ್ವಹಣೆ (10+01)

 ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ

 

ಕುರಿಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ

 

ಟಗರುಗಳ ನಿರ್ವಹಣೆ (10)

ರೂ. 13,000 ರಂತೆ ಸಾಲ ಸೌಲಭ್ಯ

 

 ಟಗರುಗಳ ನಿರ್ವಹಣೆ (20)

ರೂ. 26,000 ರಂತೆ ಸಾಲ ಸೌಲಭ್ಯ

 

ಮೇಕೆ ಸಾಕಾಣಿಕೆ 

 

3

ಮೇಕೆಗಳ ನಿರ್ವಹಣೆ (10+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ

 

ಮೇಕೆಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ

4

ಹಂದಿ ಸಾಕಾಣಿಕೆ (10)

ರೂ,60,000 ರಂತೆ ಸಾಲ ಸೌಲಭ್ಯ

 

           ಕೋಳಿ ಸಾಕಾಣಿಕೆ 

 

5

ಮಾಂಸದ ಕೋಳಿ ಸಾಕಾಣಿಕೆ

2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ

 

 ಮೊಟ್ಟೆ ಕೋಳಿ ಸಾಕಾಣಿಕೆ

1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.

ಈ ಮಾಹಿತಿ ನಿಮಗೆ ಉಪಯೋಗವಾಗಿದ್ದರೆ ಬೇರೆಯವರಿಗೂ ಹಂಚಿಕೊಳ್ಳಿ ಧನ್ಯವಾದಗಳು

]]>
Sun, 04 May 2025 06:04:31 +0530 shivuagrico
Free tailoring training&ಉಚಿತ ಊಟ ವಸತಿಯೊಂದಿಗೆ ಹೊಲಿಗೆ ಯಂತ್ರ ತರಭೇತಿ https://krushirushi.in/Free-tailoring-training-2071 https://krushirushi.in/Free-tailoring-training-2071 Free tailoring training-ಉಚಿತ ಊಟ ವಸತಿಯೊಂದಿಗೆ ಹೊಲಿಗೆ ಯಂತ್ರ ತರಭೇತಿ


ಉಚಿತ ????ಉಚಿತ ????ಉಚಿತ???? 
*ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ ಮಹಿಳೆಯರ ಉಚಿತ ಹೊಲಿಗೆ ತರಬೇತಿಯನ್ನು ದಿನಾಂಕ 2.6.2025 ರಿಂದ 2.7.2025  ರ ವರೆಗೆ 31 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ* 

ಹಾವೇರಿ ಜಿಲ್ಲೆಯ  ಗ್ರಾಮೀಣ ಭಾಗದ BPL ರೇಷನ್ ಕಾರ್ಡ ಹೊಂದಿದ 18-45 ವಯಸ್ಸಿನ ನಿರುದ್ಯೋಗಿ ಯುವತಿಯರಿಗೆ ಅವಕಾಶವಿದೆ.
 *ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ.*
ತರಬೇತಿಯಲ್ಲಿ ಕಲಿಸುವ ವಿಷಯಗಳು 
ಕಟೋರಿ ಬ್ಲೌಸ್
ಪ್ರಿನ್ಸೆಸ್ ಕಟ್ ಬ್ಲೌಸ್ 
ಬೋಟ್ ನೆಕ್ ಬ್ಲೌಸ್ 
ಸಾದಾ ಬ್ಲೌಸ್
ಹೈ ನೆಕ್ ಬ್ಲೌಸ್
V ನೆಕ್ ಬ್ಲೌಸ್ 
ಫುಲ್ ಸ್ಲೀವ್ ಬ್ಲೌಸ್ ಹೊಲಿಯುವುದು 
ಚೂಡಿದಾರ್ ಹೊಲಿಯುವುದು 
ಸಣ್ಣ ಮಕ್ಕಳ ಬಟ್ಟೆ ಹೊಲಿಯುವುದು 
ಯೂನಿಫಾರ್ಮ್
ಲಾಂಗ್ ಗೌನ್ ಹೊಲಿಯುವುದು
ಕ್ರಾಪ್ ಟಾಪ್ ಹೊಲಿಯುವುದು
ನೈಟ್ ಡ್ರೆಸ್ ಹೊಲಿಯುವುದು
ಮುಂತಾದವುಗಳನ್ನು ಉಚಿತವಾಗಿ ಕಲಿಸುತ್ತೇವೆ..????????

ತಮ್ಮ ಹೆಸರನ್ನು ಫೋನ್ ಮೂಲಕ ನೋಂದಾಯಿಸಿಕೊಳ್ಳಲು *8660219375* ????ನಂಬರ್ ಗೆ ಕಾಲ್ ಮಾಡಿ.

]]>
Sat, 03 May 2025 11:24:45 +0530 shivuagrico
Karnataka rain alert&ಈ ಜಿಲ್ಲೆಗಳಲ್ಲಿ ಬೆಳಿಗ್ಗೆ ರಣ ಬಿಸಿಲು,ಸಂಜೆಯಾಗುತ್ತಿದ್ದಂತೆ ಮಳೆಯ ಅರ್ಭಟ https://krushirushi.in/karnataka-rain-alert-2070 https://krushirushi.in/karnataka-rain-alert-2070 Karnataka rain alert-ಈ ಜಿಲ್ಲೆಗಳಲ್ಲಿ ಬೆಳಿಗ್ಗೆ ರಣ ಬಿಸಿಲು,ಸಂಜೆಯಾಗುತ್ತಿದ್ದಂತೆ ಮಳೆಯ ಅರ್ಭಟ

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಮೋಡ ಸ್ವಲ್ಪ ಜಾಸ್ತಿ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ನಾಳೆ ಮುಂಜಾನೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯ ಉಳಿದ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. *ಗಾಳಿಯ ಪ್ರಭಾವ ಅಂದಾಜಿಸಲು ಸಾಧ್ಯವಾಗುತ್ತಿಲ್ಲ.* 
ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಮೇ 6ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆಯಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಶಿವಮೊಗ್ಗ ಜಿಲ್ಲೆಯಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ಮೇ 4ರಿಂದ ಮಲೆನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಮಟ್ಟಿಗೆ ಕಡಮೆಯಾಗುವ ಸಾಧ್ಯತೆಗಳಿದ್ದರೂ ಮೇ 6ರಿಂದ ಹೆಚ್ಚಾಗುವ ನಿರೀಕ್ಷೆ ಇದೆ. 

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳ ಆಂದ್ರಾ ಗಡಿಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ. ಕಲಬುರ್ಗಿ - ಮಹಾರಾಷ್ಟ್ರ ಗಡಿ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 


ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 


ಈಗಿನಂತೆ ಮೇ 4 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 6ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.

SACHET-ಹವಾಮಾನ ಮುನ್ಸೂಚನೆಗೆ ಹೊಸ ಆ್ಯಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ,ನಿಮ್ಮ ಮೊಬೈಲ್ ನಲ್ಲೇ ಹೀಗೆ ತಿಳಿದುಕೊಳ್ಳಿ ಹವಾಮಾನ ಮುನ್ಸೂಚನೆ


ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ಮನ್ ಕಿ ಬಾತ್‌ನಲ್ಲಿ (Mann Ki Baat)ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA)ದ CAP ಆಧಾರಿತ ಇಂಟಿಗ್ರೇಟೆಡ್ ಅಲರ್ಟ್ ಸಿಸ್ಟಮ್ ಸ್ಯಾಚೆಟ್ ಆಪ್‌ ಬಗ್ಗೆ ಉಲ್ಲೇಖಿಸಿದ್ದಾರೆ. ಈ ವ್ಯವಸ್ಥೆಯು ಭಾರತದಾದ್ಯಂತ ಲಭ್ಯವಿದ್ದು, ಅದರ ವೆಬ್‌ಸೈಟ್‌ನಲ್ಲಿ ಉಲ್ಲೇಖಿಸಿದಂತೆ ಭೂ ಗುಪ್ತಚರವನ್ನು ಬಳಕೆ ಮಾಡಿಕೊಂಡು ಬಹು ತಂತ್ರಜ್ಞಾನದ ಮೂಲಕ ಮುಂಚಿನ ಎಚ್ಚರಿಕೆಯ ನೈಜ-ಸಮಯದ ಬಗ್ಗೆ ಮಾಹಿತಿಯನ್ನು ಪಡೆಯಬಹುದಾಗಿದೆ.

ಸಚೇತ್‌ನ ವೆಬ್‌ಸೈಟ್ ಪ್ರಕಾರ,"XX-NDMAEW ಹೆಡರ್‌ನಿಂದ ಎಸ್‌ಎಂಎಸ್‌ ಮೂಲಕ ವಿಪತ್ತು ಎಚ್ಚರಿಕೆಗಳನ್ನು ಸ್ವೀಕರಿಸಿಕೊಳ್ಳಬಹುದಾಗಿದ್ದು, ಬಳಕೆದಾರರು ಜಾಗರೂಕರಾಗಿರಬಹುದಾಗಿದೆ. ಆಯಪ್ ಅನ್ನು ಪ್ರತ್ಯೇಕವಾಗಿ "ಹವಾಮಾನ ಮುನ್ಸೂಚನೆ ಮಾಹಿತಿಗಾಗಿ ಮತ್ತು ಬಹು ಸ್ಥಳಗಳ ಚಂದಾದಾರಿಕೆ ಸೌಲಭ್ಯದೊಂದಿಗೆ ವಿಪತ್ತು ಎಚ್ಚರಿಕೆಗಳನ್ನು ಸ್ವೀಕರಿಸಲು ಬಳಸಬಹುದು". ಎಂದು ಮೋದಿ ತಿಳಿಸಿದ್ದಾರೆ.

ಬಳಕೆದಾರರು ತಮ್ಮ ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಬ್ರೌಸರ್‌ಗಳಲ್ಲಿ ಬ್ರೌಸರ್ ನೋಟಿಫಿಕೇಶ್‌ ಅನ್ನು ಪಡೆಯುತ್ತಾರೆ. ಬಳಕೆದಾರರು ವಿಪತ್ತು ಸಂಬಂಧಿತ ಮಾಹಿತಿಯ ಅಧಿಸೂಚನೆಯನ್ನು ತತ್‌ ಕ್ಷಣವೇ ಪಡೆಯಬಹುದು ಎಂದು ವೆಬ್‌ಸೈಟ್ ನಲ್ಲಿ ಉಲ್ಲೇಖ ಮಾಡಿದೆ.

ಆರ್‌ಎಸ್‌ಎಸ್ ಫೀಡ್‌ನಲ್ಲಿಯೂ ಎಚ್ಚರಿಕೆಯನ್ನು ಪ್ರಕಟಿಸಲಾಗುತ್ತದೆ. ಅಲ್ಲದೆ ಸುದ್ದಿ ಸಂಸ್ಥೆಗಳು ಇದಕ್ಕೆ ಚಂದಾದಾರರಾಗಿದ್ದರೆ ಮುಂಚಿತವಾಗಿ ಈ ಬಗ್ಗೆ ಮಾಹಿತಿ ಪ್ರಕಟ ಮಾಡಬಹುದಾಗಿದೆ. ಈ ಮೂಲಕ ಮುಂದೆ ಆಗುವ ದೊಡ್ಡ ಮಟ್ಟದ ಅನಾಹುತಗಳನ್ನು ತಪ್ಪಿಸಬಹುದಾಗಿದೆ.

ವೆಬ್‌ಸೈಟ್‌ನಲ್ಲಿ ಪ್ರಕಟವಾದ ಮಾಹಿತಿಯ ಪ್ರಕಾರ, ಆಪ್‌ ಅನ್ನು ಉತ್ತರ ಪ್ರದೇಶದಲ್ಲಿ ಸುಮಾರು 5.4 ಕೋಟಿ ಜನರು, ರಾಷ್ಟ್ರ ರಾಜಧಾನಿಯಲ್ಲಿ 4.6 ಕೋಟಿ ಜನರು, ಮಹಾರಾಷ್ಟ್ರದಲ್ಲಿ 1.1 ಕೋಟಿ ಜನರು ಡೌನ್‌ಲೋಡ್ ಮಾಡಿದ್ದಾರೆ.

ನೀವೂ ಆ್ಯಪ್ ಮೂಲಕ ಮಳೆ ಮುನ್ಸೂಚನೆ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.cdotindia.capsachet

ನಂತರ ಆ್ಯಪ್ ಡೌನಲ್ಲೋಡ್ ಮಾಡಿಕೊಳ್ಳಿ

ನಂತರ ಮುಂದೆ ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಮುಂದೆ ಮೇಲೆ ಕ್ಲಿಕ್ ಮಾಡಿ

ನಂತರ /(Yes) ಮಾರ್ಕ್ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಸಂಖ್ಯೆ ಅಥವಾ ಇಮೇಲ್ ಐಡಿಯನ್ನು ನಮೂದಿಸಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ

ನಂತರ ಈ ಕೆಳಗಿನಂತೆ ನಿಮಗೆ ಹವಾಮಾನ ಮಾಹಿತಿ ಸಿಗಲಿದೆ

]]>
Sat, 03 May 2025 06:03:28 +0530 shivuagrico
New ration card&ಹೊಸ APL BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ https://krushirushi.in/New-ration-card-2069 https://krushirushi.in/New-ration-card-2069 New ration card-ಹೊಸ APL BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ


ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಈಗ ಮತ್ತೆ ಅವಕಾಶ ನೀಡಲಾಗಿದೆ. ಬಿಪಿಎಲ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ವೆಬ್​ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

APL ಹಾಗೂ BPL ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದ್ದು, 01-05-2025 ರಿಂದ 05-05-2025 ರವರೆಗೆ ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರೋರು ಅರ್ಜಿ ಸಲ್ಲಿಸಬಹುದು
ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಬಹುದು
ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತವಾಗಿರಲಿದೆ.

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು

ವೋಟರ್ ಐಡಿ
ಆಧಾರ್ ಕಾರ್ಡ್
ವಯಸ್ಸಿನ ಪ್ರಮಾಣ ಪತ್ರ
ಡ್ರೈವಿಂಗ್ ಲೈಸೆನ್ಸ್
ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
ಮೊಬೈಲ್ ಸಂಖ್ಯೆ
ಸ್ವಯಂ ಘೋಷಿತ ಪ್ರಮಾಣ ಪತ್ರ
ಈ ಮೇಲ್ಕಂಡ ದಾಖಲೆಗಳಿದ್ದಲೇ, ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಹಾಗಾದ್ರೇ ಅರ್ಜಿ ಸಲ್ಲಿಸೋದು ಹೇಗೆ ಎನ್ನುವ ಹಂತ ಈ ಕೆಳಗಿದೆ.

ಹೊಸ ಪಡಿತರ ಚೀಟಿಗಾಗಿ ಈ ಹಂತಗಳನ್ನು ಅನುಸರಿಸಿ, ಅರ್ಜಿ ಸಲ್ಲಿಸಿ

kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.
ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ ಕ್ಲಿಕ್ ಮಾಡಿ.
ಇದಲ್ಲದೇ https://ahara.kar.nic.in/Home/EServices  ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.
ಈ ಜಾಲತಾಣದಲ್ಲಿ ಕ್ಲಿಕ್ ಮಾಡಿದ ನಂತ್ರ, ನೀವು ಇ-ಪಡಿತರ ಚೀಟಿ ಆಯ್ಕೆ. ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದ್ರೇ..
ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋ ಲಿಂಕ್ ಸಿಗಲಿದೆ. ಅಲ್ಲಿ ಕ್ಲಿಕ್ ಮಾಡಿ
ಈ ಬಳಿಕ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ, ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.
ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ.
ಈ ಬಳಿಕ ಅರ್ಜಿಯ ಜೊತೆಗೆ ಕೇಳುವಂತ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿ

]]>
Fri, 02 May 2025 15:25:13 +0530 shivuagrico
SSLC result 2025&ಇಂದು ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ,ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್ https://krushirushi.in/sslc-result-2025 https://krushirushi.in/sslc-result-2025 SSLC result 2025-ಇಂದು ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ,ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ವಿದ್ಯಾರ್ಥಿಗಳು ಕಾತುರಲಿಂದ ಕಾಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ( Karnataka SSLC result ) ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ಇಂದು ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ.


ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು ಎಂದಿದ್ದಾರೆ.

ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ( Karnataka SSLC Exam-1 Results ) ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ವರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ

ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in  ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ.

ಈ ಫಲಿತಾಂಶವನ್ನು https://karresults.nic.in  ಜಾಲತಾಣದಲ್ಲಿ ದಿನಾಂಕ 02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಅಂತ ಮಾಹಿತಿ ನೀಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ವೆಬ್‌ಸೈಟ್‌ ಲಿಂಕ್ https://karresults.nic.in/  ಗೆ ಭೇಟಿ ನೀಡಿ. 


ತಮ್ಮ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಡ್ಮಿಷನ್‌ ಟಿಕೆಟ್‌ನಲ್ಲಿರುವ ರಿಜಿಸ್ಟರ್‌ ನಂಬರ್ ಟೈಪಿಸಿ.
ನಂತರ 'Submit' ಎಂಬಲ್ಲಿ ಕ್ಲಿಕ್ ಮಾಡಿ.


ಫಲಿತಾಂಶ ಪ್ರದರ್ಶಿತವಾಗುತ್ತದೆ. ಡೌನ್‌ಲೋಡ್‌ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

 

]]>
Fri, 02 May 2025 05:43:13 +0530 shivuagrico
Tractor subsidy&90% ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್ ಸೇರಿದಂತೆ ಕೃಷಿ ಯಂತ್ರೊಪಕರಣಗಳ ಖರೀದಿಗೆ ಅರ್ಜಿ ಆಹ್ವಾನ https://krushirushi.in/Tractor-subsidy-2025 https://krushirushi.in/Tractor-subsidy-2025 Tractor subsidy-90% ಸಬ್ಸಿಡಿಯಲ್ಲಿ ಮಿನಿ ಟ್ರ್ಯಾಕ್ಟರ್ ಸೇರಿದಂತೆ ಕೃಷಿ ಯಂತ್ರೊಪಕರಣಗಳ ಖರೀದಿಗೆ ಅರ್ಜಿ ಆಹ್ವಾನ

ಸಹಾಯಧನ ಪಡೆದು ಕೃಷಿ ಯಂತ್ರೋಪಕರಣಗಳನ್ನು (Agricultural machinery) ಖರೀದಿಸಲು ಅರ್ಹ ರೈತರಿಂದ (Farmer) ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ರೈತರಿಗೆ ಶೇ.50 ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ (Tractor Subsidy) ಟ್ರಾಕ್ಟರ್ ಖರೀದಿಗೆ ಅರ್ಜಿ ಆಹ್ವಾನಿಸಲಾಗಿದೆ.

2024-25ರ ಸಾಲಿನ ಕೃಷಿ ಯಾಂತ್ರೀಕರಣ(Agriculture mechanisation) ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ(agro processing) ಮಿನಿ ಟ್ರ್ಯಾಕ್ಟರ್(Mini tractor), ಪವರ್ ಟಿಲ್ಲರ್(power tiller), ರೋಟೋವೇಟರ್(Rotovator), ಕಳೆ ಕೊಚ್ಚುವ ಯಂತ್ರಗಳು(brush cutter), ಪವರ್ ವೀಡರ್(Power weeder) , ಪವರ್ ಸ್ಪ್ರೇಯರ್ಸ್(power sprayer), ಡೀಸೆಲ್ ಪಂಪ್‍ಸೆಟ್(Diseal pumpset), ಪ್ಲೋರ್‌ಮಿಲ್(flour mill), ಯಂತ್ರ ಚಾಲಿತ ಮೋಟೋಕಾರ್ಟ್(Motocarp), ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು(oil mill) ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು(Hi tech harvester hub) ಹಾಗೂ ತುಂತುರು ನೀರಾವರಿ(Sprinkler) ಯೋಜನೆಯಡಿಯಲ್ಲಿ ಶೇ.90ರ ರಿಯಾಯ್ತಿ ದರದಲ್ಲಿ ತುಂತುರು ನೀರಾವರಿ ಘಟಕ (ಹೆಚ್‍ಡಿಪಿಇ ಪೈಪ್ಸ್) ವಿತರಿಸಲಾಗುತ್ತಿದೆ.

ಆಸಕ್ತ ರೈತರು ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಎರಡು ಭಾವಚಿತ್ರ, ರೂ.100 ರ ಛಾಪಾ ಕಾಗದದೊಂದಿಗೆ ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಕೃಷಿ ಭಾಗ್ಯ(Krushi bhagya)ಯೋಜನೆಯಡಿಯಲ್ಲಿ ರೈತರಿಗೆ ನೀರು ಸಂಗ್ರಹಣಾ ರಚನೆ(ಕೃಷಿ ಹೊಂಡ), ಕೃಷಿ ಹೊಂಡದ(farm pond) ಸುತ್ತಲೂ ತಂತಿ ಬೇಲಿ ನಿರ್ಮಾಣ, ಹೊಂಡದಿಂದ ನೀರು ಎತ್ತಲು ಡೀಸೆಲ್/ ಸೋಲಾರ್ ಪಂಪ್ ಸೆಟ್(ಅಪ್ ಟು 10 ಹೆಚ್‍ಪಿ) ಮತ್ತು ಬೆಳೆಗೆ ನೀರು ಹಾಯಿಸಲು ಸೂಕ್ಷ್ಮ ನೀರಾವರಿ ಘಟಕಗಳ ಸೌಲಭ್ಯಗಳನ್ನು ಸಾಮಾನ್ಯ ರೈತರಿಗೆ ಶೇ.80ರ ಸಹಾಯಧನದಲ್ಲಿ /ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ.90ರ ಸಹಾಯಧನದಲ್ಲಿ ನೀಡಲಾಗುವುದು.

ಕೃಷಿ ಭಾಗ್ಯ ಯೋಜನೆಗೆ ರೈತರು ಒಟ್ಟು ಸಾಗುವಳಿ ಕ್ಷೇತ್ರದ ಒಂದು ಸರ್ವೇ ನಂಬರ್‌ನಲ್ಲಿ ಕನಿಷ್ಠ 1 ಎಕರೆ ಭೂಮಿ ಹೊಂದಿರಬೇಕು. ಹಿಂದಿನ ಸಾಲುಗಳಲ್ಲಿ ಕೃಷಿ ಭಾಗ್ಯ ಯೋಜನೆ ಅಥವಾ ಇನ್ನಾವುದೇ ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಯಾಗಿರುವ ರೈತರು ಈ ಯೋಜನೆಗೆ ಅರ್ಹತೆ ಹೊಂದಿರುವುದಿಲ್ಲ, ಇದನ್ನು ಕೆ ಕಿಸಾನ್ ಪೋರ್ಟಲ್‍ನಲ್ಲಿ ಪರಿಶೀಲಿಸಿ ಖಾತರಿಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://raitamitra.karnataka.gov.in/

]]>
Thu, 01 May 2025 17:51:31 +0530 shivuagrico
Karnataka weather report&ಮುಂದಿನ 5 ದಿನ ಸುರಿಯಲಿದೆ ಭಾರಿ ಮಳೆ https://krushirushi.in/Karnataka-weather-report-2066 https://krushirushi.in/Karnataka-weather-report-2066 Karnataka weather report-ಮುಂದಿನ 5 ದಿನ ಸುರಿಯಲಿದೆ ಭಾರಿ ಮಳೆ 

ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ (Karnataka Weather) ಮುನ್ಸೂಚನೆ ಸಿಕ್ಕಿದೆ. ಇನ್ನು ಮೇ 1ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಹಾವೇರಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ರಾಯಚೂರು, ಕೊಪ್ಪಳ, ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಕೊಡಗು ಹಾಸನ, ಮೈಸೂರು, ರಾಮನಗರ, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಶಿವಮೊಗ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಬಲವಾದ ಗಾಳಿಯೊಂದಿಗೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 23°C ಇರುವ ಸಾಧ್ಯತೆ ಇದೆ.

ಇನ್ನು ಮೇ 2ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಧಾರವಾಡ, ಗದಗ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ, ಮೈಸೂರು, ರಾಮನಗರ, ತುಮಕೂರು, ಕೋಲಾರ, ಬೆಂಗಳೂರು, ಬೆಂ.ಗ್ರಾಮಾಂತರ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 3ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 4ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಯಾದಗಿರಿ, ಬೀದರ್‌, ಕಲಬುರಗಿ, ಕೊಪ್ಪಳ, ಗದಗ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 5 ಮತ್ತು 6ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಯಾದಗಿರಿ, ಬೀದರ್, ಕಲಬುರಗಿ, ಕೊಪ್ಪಳ, ಗದಗ, ಹಾವೇರಿ, ರಾಯಚೂರು ಜಿಲ್ಲೆಗಳಲ್ಲಿಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

]]>
Wed, 30 Apr 2025 20:57:18 +0530 shivuagrico
ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಗಲಿದೆ 3 ತಿಂಗಳ 6000 ರೂಪಾಯಿ ಗೃಹಲಕ್ಷ್ಮಿ ಹಣ&Gruhalakshmi list https://krushirushi.in/Gruhalakshmi-list-2065 https://krushirushi.in/Gruhalakshmi-list-2065 ಈ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ 3 ತಿಂಗಳ ಗೃಹಲಕ್ಷ್ಮಿ ಹಣ-Gruhalakshmi list

ಬಾಕಿ ಉಳಿದಿರುವ ಮೂರು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಒಟ್ಟಿಗೆ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನವರಿ, ಫೆಬ್ರವರಿ, ಮಾರ್ಚ್ ಈ ಮೂರು ತಿಂಗಳ ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.

ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್‌ ಖಾತೆಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. 

 

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Wed, 30 Apr 2025 16:33:13 +0530 shivuagrico
Bele vime&ಈ ಜಿಲ್ಲೆಯ ರೈತರ ಖಾತೆಗೆ ಬಾಕಿ ಬೆಳೆವಿಮೆ ಹಣ ಜಮಾ https://krushirushi.in/Bele-vime-2064 https://krushirushi.in/Bele-vime-2064 Bele vime-ಈ ಜಿಲ್ಲೆಯ ರೈತರ ಖಾತೆಗೆ ಬಾಕಿ ಬೆಳೆವಿಮೆ ಹಣ ಜಮಾ

ಹವಾಮಾನ ಆಧರಿತ ಬೆಳೆ ವಿಮೆಯಿಂದ ವಂಚಿತಗೊಂಡಿದ್ದ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ರೈತ ಫಲಾನುಭವಿಗಳಿಗೆ ಖುಷಿ ಸುದ್ದಿಯೊಂದನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಿಸಿದ್ದಾರೆ. 

ಜಿಲ್ಲೆಯ ಕೆಲ ಪಂಚಾಯ್ ವ್ಯಾಪ್ತಿಯ ರೈತರಿಗಷ್ಟೇ ಸುಮಾರು 10 ಕೋಟಿ ಅಷ್ಟು ಬೆಳೆ ವಿಮೆ ಬಂದಿದ್ದು, ಉಳಿದ ಬಹುಪಾಲು ಫಲಾನುಭವಿ ರೈತರಿಗೆ ತಾಂತ್ರಿಕ ಕಾರಣ ನೆಪವೊಡ್ಡಿ ವಿಮಾ ಕಂಪನಿ ವಿಮಾ ಪರಿಹಾರ ಮೊತ್ತ ಜಮಾ ಮಾಡಿರಲಿಲ್ಲ. ಕೇಂದ್ರ ಸರಕಾರದ ಬಳಿ ಜಿಲ್ಲೆಯ ರೈತರ ಸಮಸ್ಯೆ ಪ್ರಸ್ತಾಪಿಸಿದ್ದೆ. ಕಾಲಮಿತಿಯ ಗಡುವು ನೀಡಿ ಕೇಂದ್ರ ಸರಕಾರವೂ 3 ಸಲ ವಿಮಾ ಕಂಪನಿಗೆ ಆದೇಶ ಮಾಡಿತ್ತು. ಆದರೆ ವಿಮಾ ಪಾವತಿಗೆ ರಾಜ್ಯ ಸರಕಾರದಿಂದ ಮಾಹಿತಿ ಸಮರ್ಪಕವಾಗಿ ಸಿಕ್ಕಿಲ್ಲ ಎಂದು ವಿಮಾ ಕಂಪನಿ ಪುನಃ ದೂರುತ್ತಲೇ ಇತ್ತು. ಕೇಂದ್ರದ ಆದೇಶಕ್ಕೆ ಅಂತೂ ಮಣಿದ ವಿಮಾ ಕಂಪನಿ ಎ.29ರ ಮಂಗಳವಾರ ದಿಂದ ಜಿಲ್ಲೆಯ ರೈತರಿಗೆ ವಿಮಾ ಪರಿಹಾರ ಮೊತ್ತ ಪಾವತಿಸಲು ಆರಂಭಿಸಿದೆ ಎಂದು ಸಂಸದ ಕಾಗೇರಿ ವಿವರಿಸಿದ್ದಾರೆ. 


ರಾಜ್ಯ ಸರಕಾರ ಮಳೆ ಮಾಪನ ಕೇಂದ್ರ ಸಹಿತ ಹಲವು ಸಂಗತಿಗಳ ನಿರ್ವಹಣೆ ಸರಿಯಾಗಿ ಮಾಡದ ಪರಿಣಾಮ ಪರಿಹಾರಕ್ಕೆ ಕೇಂದ್ರ ಸರಕಾರ ಮಧ್ಯ ಪ್ರವೇಶಿಸುವಂತೆ ಆಗಿತ್ತು. ಇನ್ನು 3-4 ದಿನದಲ್ಲಿ ಹಣ ಬಂದು ರೈತರ ಖಾತೆಗೆ ಜಮಾ ಆಗಲಿದೆ ಎಂದಿದ್ದಾರೆ. 
ರೈತರಿಗೆ ನ್ಯಾಯ ಕೊಡಿಸಲು ನೆರವಾದ ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್, ಕೇಂದ್ರದ ಅಧಿಕಾರಿಗಳನ್ನು ಹಾಗೂ ತಡವಾದರೂ ರೈತರಿಗೆ ನ್ಯಾಯ ಕೊಡಿಸಲು ಸಹಕಾರ ನೀಡಿದ ರಾಜ್ಯ ಸರಕಾರದ ಅಧಿಕಾರಿಗಳಿಗೆ ಮತ್ತು ಜಿಲ್ಲಾಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಮತ್ತು ಮರಳಿ ಈ ಸಮಸ್ಯೆ ಆಗದಂತೆ ರಾಜ್ಯ ಸರಕಾರ ತಕ್ಷಣ ಕ್ರಮವಹಿಸಿ ಮಳೆ ಮಾಪನ ಕೇಂದ್ರ ಸರಿಯಾಗಿ ನಿರ್ವಹಣೆ ಮಾಡಬೇಕು ಎಂದೂ ಸಂಸದ ಕಾಗೇರಿ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ. 

Bele vime-ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Wed, 30 Apr 2025 05:53:19 +0530 shivuagrico
ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ&Input subsidy for croploss https://krushirushi.in/Input-subsidy-for-croploss-2063 https://krushirushi.in/Input-subsidy-for-croploss-2063 Input subsidy for croploss-ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.


ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್‌ ಸಬ್ಸಿಡಿ ರೈತರ ಬ್ಯಾಂಕ್‌ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Tue, 29 Apr 2025 18:09:08 +0530 shivuagrico
ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮುಂದಿನ 5 ದಿನ ಗುಡುಗು ಸಹಿತ ಭಾರಿ ಮಳೆ&Karnataka rain alert imd https://krushirushi.in/karnataka-rain-alert-imd-2062 https://krushirushi.in/karnataka-rain-alert-imd-2062 ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮುಂದಿನ 5 ದಿನ ಗುಡುಗು ಸಹಿತ ಭಾರಿ ಮಳೆ-Karnataka rain alert imd

ಬಂಗಾಳಕೊಲ್ಲಿಯಲ್ಲಿ ಈಗಾಗಲೇ ರೂಪುಗೊಂಡಿರುವ ಚಂಡಮಾರುತದ ಪರಿಚಲನೆಯ ಪರಿಣಾಮವಾಗಿ ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಕರ್ನಾಟಕ ಹವಮಾನ ಇಲಾಖೆ ಮಾಹಿತಿ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಈಗಾಗಲೇ ರೂಪುಗೊಂಡಿರುವ ಚಂಡಮಾರುತದ ಪರಿಚಲನೆಯು ಮರಾಠವಾಡ ಪ್ರದೇಶದಿಂದ ಕರ್ನಾಟಕ ಮತ್ತು ತಮಿಳುನಾಡಿನಾದ್ಯಂತ ಮನ್ನಾರ್ ಕೊಲ್ಲಿಯವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ವಿಸ್ತರಿಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ತಗ್ಗು ಕರ್ನಾಟಕದ ಹವಾಮಾನದ ಮೇಲೆ ಪ್ರಭಾವ ಬೀರುತ್ತಿದೆ. ಉತ್ತರ ಒಳನಾಡು ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಮತ್ತು ಕರಾವಳಿ ಪ್ರದೇಶಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಬೆಂಗಳೂರಿನಲ್ಲಿ ಆಹ್ಲಾದಕರ ಹವಾಮಾನವಿರುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

5 ದಿನ ಮಳೆ

ಮುಂದಿನ 5 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ಮತ್ತು ಎಚ್ಚರಿಕೆಗಳನ್ನು ನೀಡಿದೆ. ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40-60 ಕಿಮೀ ತಲುಪುವ ಸಾದ್ಯತೆ ಇದೆ ಎಂದು ಹೇಳಿದೆ. ಅಂತೆಯೇ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಒಳನಾಡು ಅಂದರೆ ವಿಜಯನಗರ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಹಾಸನ, ಮಂಡ್ಯ, ಮೈಸೂರು, ಬೆಂಗಳೂರು, ರಾಮನಗರ, ಚಾಮರಾಜನಗರಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು, ಕೋಲಾರದ ಮುಳಬಾಗಿಲು, ಬಂಗಾರಪೇಟೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಅಂತೆಯೇ ಚಿತ್ರದುರ್ಗದ ಹೊಳಲ್ಕೆರೆ, ಚಳ್ಳಕೆರೆ, ಹಿರಿಯೂರು ಮತ್ತು ಹೊಸದುರ್ಗದಲ್ಲಿ ಚದುರಿದಂತೆ ಮಳೆಯಾಗಲಿದ್ದು, ಚಿತ್ರದುರ್ಗ ನಗರದಲ್ಲಿ ಒಣಹವೆ ಮುಂದುವರೆಯಲಿದೆ ಎನ್ನಲಾಗಿದೆ. ಉಳಿದಂತೆ ಉತ್ತರ ಕರ್ನಾಟಕ ಗದಗ, ಕೊಪ್ಪಳ, ಬಳ್ಳಾರಿ, ಹಾವೇರಿ ಯಲ್ಲಿ ಸಾಧಾರಣ ಮಳೆ ಜೊತೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ

ಇನ್ನು ಬೆಂಗಳೂರು ಮತ್ತು ಅದರ ಸುತ್ತಮುತ್ತ ಪ್ರದೇಶಗಳಲ್ಲಿ ಏಪ್ರಿಲ್ 30 ಮತ್ತು ಮೇ 01, 2025 ರಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ : ಕಾಸರಗೋಡು - ಕರ್ನಾಟಕದ ಗಡಿ ಭಾಗಗಳ ಸುತ್ತಮುತ್ತ, ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ, ಉಡುಪಿ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಒಂದೆರಡು ಕಡೆ ಅನಿರೀಕ್ಷಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಮಳೆ ಸ್ವಲ್ಪ ಕಡಿಮೆ ಇರುವ ಸಾಧ್ಯತೆಗಳಿದ್ದರೂ ಮೇ 1ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ ಜಿಲ್ಲೆಯ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಕುದುರೆಮುಖ, ಆಗುಂಬೆ, ಶಿೃಂಗೇರಿ ಕೊಪ್ಪ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಶಿವಮೊಗ್ಗ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು ಹಾಗೂ ಹಾಸನ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಎಪ್ರಿಲ್ 29ರಿಂದ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಮೇ 1ರಿಂದ ಮಳೆ ಹೆಚ್ಚಾಗುವ ಸೂಚನೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು, ಮೋಡದ ವಾತಾವರಣ ಇರಬಹುದು. 
ಈಗಿನಂತೆ ಮುಂದಿನ 2 ದಿವಸಗಳ ಕಾಲ ಮಳೆ ಕಡಿಮೆಯಾಗುವ ಸೂಚನೆಗಳಿದ್ದು, ಮೇ 1ರಿಂದ ದಕ್ಷಿಣ ಒಳನಾಡು ಹಾಗೂ ಮೇ 4ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

SACHET-ಹವಾಮಾನ ಮುನ್ಸೂಚನೆಗೆ ಹೊಸ ಆ್ಯಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ,ನಿಮ್ಮ ಮೊಬೈಲ್ ನಲ್ಲೇ ಹೀಗೆ ತಿಳಿದುಕೊಳ್ಳಿ ಹವಾಮಾನ ಮುನ್ಸೂಚನೆ


ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ಮನ್ ಕಿ ಬಾತ್‌ನಲ್ಲಿ (Mann Ki Baat)ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA)ದ CAP ಆಧಾರಿತ ಇಂಟಿಗ್ರೇಟೆಡ್ ಅಲರ್ಟ್ ಸಿಸ್ಟಮ್ ಸ್ಯಾಚೆಟ್ ಆಪ್‌ ಬಗ್ಗೆ ಉಲ್ಲೇಖಿಸಿದ್ದಾರೆ. ಈ ವ್ಯವಸ್ಥೆಯು ಭಾರತದಾದ್ಯಂತ ಲಭ್ಯವಿದ್ದು, ಅದರ ವೆಬ್‌ಸೈಟ್‌ನಲ್ಲಿ ಉಲ್ಲೇಖಿಸಿದಂತೆ ಭೂ ಗುಪ್ತಚರವನ್ನು ಬಳಕೆ ಮಾಡಿಕೊಂಡು ಬಹು ತಂತ್ರಜ್ಞಾನದ ಮೂಲಕ ಮುಂಚಿನ ಎಚ್ಚರಿಕೆಯ ನೈಜ-ಸಮಯದ ಬಗ್ಗೆ ಮಾಹಿತಿಯನ್ನು ಪಡೆಯಬಹುದಾಗಿದೆ.

ಸಚೇತ್‌ನ ವೆಬ್‌ಸೈಟ್ ಪ್ರಕಾರ,"XX-NDMAEW ಹೆಡರ್‌ನಿಂದ ಎಸ್‌ಎಂಎಸ್‌ ಮೂಲಕ ವಿಪತ್ತು ಎಚ್ಚರಿಕೆಗಳನ್ನು ಸ್ವೀಕರಿಸಿಕೊಳ್ಳಬಹುದಾಗಿದ್ದು, ಬಳಕೆದಾರರು ಜಾಗರೂಕರಾಗಿರಬಹುದಾಗಿದೆ. ಆಯಪ್ ಅನ್ನು ಪ್ರತ್ಯೇಕವಾಗಿ "ಹವಾಮಾನ ಮುನ್ಸೂಚನೆ ಮಾಹಿತಿಗಾಗಿ ಮತ್ತು ಬಹು ಸ್ಥಳಗಳ ಚಂದಾದಾರಿಕೆ ಸೌಲಭ್ಯದೊಂದಿಗೆ ವಿಪತ್ತು ಎಚ್ಚರಿಕೆಗಳನ್ನು ಸ್ವೀಕರಿಸಲು ಬಳಸಬಹುದು". ಎಂದು ಮೋದಿ ತಿಳಿಸಿದ್ದಾರೆ.

ಬಳಕೆದಾರರು ತಮ್ಮ ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಬ್ರೌಸರ್‌ಗಳಲ್ಲಿ ಬ್ರೌಸರ್ ನೋಟಿಫಿಕೇಶ್‌ ಅನ್ನು ಪಡೆಯುತ್ತಾರೆ. ಬಳಕೆದಾರರು ವಿಪತ್ತು ಸಂಬಂಧಿತ ಮಾಹಿತಿಯ ಅಧಿಸೂಚನೆಯನ್ನು ತತ್‌ ಕ್ಷಣವೇ ಪಡೆಯಬಹುದು ಎಂದು ವೆಬ್‌ಸೈಟ್ ನಲ್ಲಿ ಉಲ್ಲೇಖ ಮಾಡಿದೆ.

ಆರ್‌ಎಸ್‌ಎಸ್ ಫೀಡ್‌ನಲ್ಲಿಯೂ ಎಚ್ಚರಿಕೆಯನ್ನು ಪ್ರಕಟಿಸಲಾಗುತ್ತದೆ. ಅಲ್ಲದೆ ಸುದ್ದಿ ಸಂಸ್ಥೆಗಳು ಇದಕ್ಕೆ ಚಂದಾದಾರರಾಗಿದ್ದರೆ ಮುಂಚಿತವಾಗಿ ಈ ಬಗ್ಗೆ ಮಾಹಿತಿ ಪ್ರಕಟ ಮಾಡಬಹುದಾಗಿದೆ. ಈ ಮೂಲಕ ಮುಂದೆ ಆಗುವ ದೊಡ್ಡ ಮಟ್ಟದ ಅನಾಹುತಗಳನ್ನು ತಪ್ಪಿಸಬಹುದಾಗಿದೆ.

ವೆಬ್‌ಸೈಟ್‌ನಲ್ಲಿ ಪ್ರಕಟವಾದ ಮಾಹಿತಿಯ ಪ್ರಕಾರ, ಆಪ್‌ ಅನ್ನು ಉತ್ತರ ಪ್ರದೇಶದಲ್ಲಿ ಸುಮಾರು 5.4 ಕೋಟಿ ಜನರು, ರಾಷ್ಟ್ರ ರಾಜಧಾನಿಯಲ್ಲಿ 4.6 ಕೋಟಿ ಜನರು, ಮಹಾರಾಷ್ಟ್ರದಲ್ಲಿ 1.1 ಕೋಟಿ ಜನರು ಡೌನ್‌ಲೋಡ್ ಮಾಡಿದ್ದಾರೆ.

ನೀವೂ ಆ್ಯಪ್ ಮೂಲಕ ಮಳೆ ಮುನ್ಸೂಚನೆ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.cdotindia.capsachet

ನಂತರ ಆ್ಯಪ್ ಡೌನಲ್ಲೋಡ್ ಮಾಡಿಕೊಳ್ಳಿ

ನಂತರ ಮುಂದೆ ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಮುಂದೆ ಮೇಲೆ ಕ್ಲಿಕ್ ಮಾಡಿ

ನಂತರ /(Yes) ಮಾರ್ಕ್ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಸಂಖ್ಯೆ ಅಥವಾ ಇಮೇಲ್ ಐಡಿಯನ್ನು ನಮೂದಿಸಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ

ನಂತರ ಈ ಕೆಳಗಿನಂತೆ ನಿಮಗೆ ಹವಾಮಾನ ಮಾಹಿತಿ ಸಿಗಲಿದೆ

]]>
Tue, 29 Apr 2025 06:06:09 +0530 shivuagrico
ಈ ಪಟ್ಟಿಯಲ್ಲಿರುವವರಿಗೆ ವಾರದೊಳಗೆ ಜಮಾ ಆಗಲಿದೆ ಗೃಹಲಕ್ಷ್ಮಿ ಹಣ&Gruhalakshmi list https://krushirushi.in/Gruhalakshmi-list-2061 https://krushirushi.in/Gruhalakshmi-list-2061 ಈ ಪಟ್ಟಿಯಲ್ಲಿರುವವರಿಗೆ ವಾರದೊಳಗೆ ಜಮಾ ಆಗಲಿದೆ ಗೃಹಲಕ್ಷ್ಮಿ ಹಣ-Gruhalakshmi list

ಗೃಹ ಲಕ್ಷ್ಮೀ ಯೋಜನೆಯ ಹಣ ಒಂದು ವಾರದೊಳಗೆ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ತಿಳಿಸಿದ್ದಾರೆ. 

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾಅತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಲಾಗುವುದು.

ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭರವಸೆ ನೀಡಿದ್ದಾರೆ ಎಂದರು.ಕೊಟ್ಟ ಮಾತನ್ನು ಉಳಿಸಿಕೊಳ್ಳುವ ವ್ಯಕ್ತಿ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು. ಹಾಗಾಗಿ ಖಂಡಿತಾ ಒಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಮಹಿಳೆಯರ ಖಾತೆಗೆ ಬರಲಿದೆ ಎಂದು ಹೇಳಿದರು


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Mon, 28 Apr 2025 18:32:17 +0530 shivuagrico
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ&pmkisan 20th instalment ineligible list https://krushirushi.in/Pmkisan-20th-instalment-ineleigible-list-2060 https://krushirushi.in/Pmkisan-20th-instalment-ineleigible-list-2060 ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 20th instalment ineligible list


ವರ್ಷದಲ್ಲಿ ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯ (ಪಿಎಂ-ಕಿಸಾನ್) ಫಲಾನುಭವಿಗಳ ಸಂಖ್ಯೆ(pmkisan 20th instalment ineligible list) ಐದು ಲಕ್ಷದಿಂದ ಆರು ಲಕ್ಷದಷ್ಟು ಕುಸಿತವಾಗಿದೆ.


ಲೋಕಸಭೆಯಲ್ಲಿ ಮೈಸೂರು ಸಂಸದ ಯದುವೀ‌ರ್ ಒಡೆಯ‌ರ್ ಮಂಗಳವಾರ ಕೇಳಿದ ಪ್ರಶ್ನೆಗೆ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್ ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ.


13ನೇ ಕಂತಿನವರೆಗೆ (2023ರ ಮಾರ್ಚ್) ರಾಜ್ಯದ ಫಲಾನುಭವಿಗಳ ಸಂಖ್ಯೆ 49 ಲಕ್ಷದಷ್ಟು ಇತ್ತು. 14ನೇ ಕಂತಿನಲ್ಲೂ ಫಲಾನುಭವಿಗಳ ಸಂಖ್ಯೆ 49.34 ಲಕ್ಷ ಆಗಿತ್ತು. 15ನೇ ಕಂತಿನಲ್ಲಿ ಈ ಸಂಖ್ಯೆ 43.78 ಲಕ್ಷಕ್ಕೆ ಕುಸಿಯಿತು. ಆ ಬಳಿಕ ಸಂಖ್ಯೆಯಲ್ಲಿ ಗಣನೀಯ ಏರಿಕೆ ಆಗಿಲ್ಲ.


ಪಿಎಂ- ಕಿಸಾನ್ ಯೋಜನೆಯಡಿ ಕೃಷಿಕರಿಗೆ ವಾರ್ಷಿಕ ₹6 ಸಾವಿರ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಈ ಮೊತ್ತವನ್ನು ₹8 ಸಾವಿರ ಅಥವಾ ₹12 ಸಾವಿರಕ್ಕೆ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Pmkisan 19th instalment ineligible list-ಪಿಎಂ ಕಿಸಾನ್ 19ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

ಇದನ್ನೂ ಓದಿ

 ಪಿಎಂ ಕಿಸಾನ್ ಸಮ್ಮಾನ ನಿಧಿ 12,000 ಕ್ಕೆ ಏರಿಕೆಗೆ ಪ್ರಸ್ತಾವನೆ, ಯಾರಿಗೆಲ್ಲಾ ಸಿಗಲಿದೆ 19ನೇ ಕಂತು ಹೀಗೆ ಚೆಕ್ ಮಾಡಿ-Pmkisan 19th instalment - https://krushirushi.in/Pmkisan-19th-instalment-1731 

]]>
Mon, 28 Apr 2025 06:01:27 +0530 shivuagrico
SACHET&ಹವಾಮಾನ ಮುನ್ಸೂಚನೆಗೆ ಹೊಸ ಆ್ಯಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ,ನಿಮ್ಮ ಮೊಬೈಲ್ ನಲ್ಲೇ ಹೀಗೆ ತಿಳಿದುಕೊಳ್ಳಿ ಹವಾಮಾನ ಮುನ್ಸೂಚನೆ https://krushirushi.in/SACHET-2058 https://krushirushi.in/SACHET-2058 SACHET-ಹವಾಮಾನ ಮುನ್ಸೂಚನೆಗೆ ಹೊಸ ಆ್ಯಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ,ನಿಮ್ಮ ಮೊಬೈಲ್ ನಲ್ಲೇ ಹೀಗೆ ತಿಳಿದುಕೊಳ್ಳಿ ಹವಾಮಾನ ಮುನ್ಸೂಚನೆ


ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ಮನ್ ಕಿ ಬಾತ್‌ನಲ್ಲಿ (Mann Ki Baat)ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA)ದ CAP ಆಧಾರಿತ ಇಂಟಿಗ್ರೇಟೆಡ್ ಅಲರ್ಟ್ ಸಿಸ್ಟಮ್ ಸ್ಯಾಚೆಟ್ ಆಪ್‌ ಬಗ್ಗೆ ಉಲ್ಲೇಖಿಸಿದ್ದಾರೆ. ಈ ವ್ಯವಸ್ಥೆಯು ಭಾರತದಾದ್ಯಂತ ಲಭ್ಯವಿದ್ದು, ಅದರ ವೆಬ್‌ಸೈಟ್‌ನಲ್ಲಿ ಉಲ್ಲೇಖಿಸಿದಂತೆ ಭೂ ಗುಪ್ತಚರವನ್ನು ಬಳಕೆ ಮಾಡಿಕೊಂಡು ಬಹು ತಂತ್ರಜ್ಞಾನದ ಮೂಲಕ ಮುಂಚಿನ ಎಚ್ಚರಿಕೆಯ ನೈಜ-ಸಮಯದ ಬಗ್ಗೆ ಮಾಹಿತಿಯನ್ನು ಪಡೆಯಬಹುದಾಗಿದೆ.

ಸಚೇತ್‌ನ ವೆಬ್‌ಸೈಟ್ ಪ್ರಕಾರ,"XX-NDMAEW ಹೆಡರ್‌ನಿಂದ ಎಸ್‌ಎಂಎಸ್‌ ಮೂಲಕ ವಿಪತ್ತು ಎಚ್ಚರಿಕೆಗಳನ್ನು ಸ್ವೀಕರಿಸಿಕೊಳ್ಳಬಹುದಾಗಿದ್ದು, ಬಳಕೆದಾರರು ಜಾಗರೂಕರಾಗಿರಬಹುದಾಗಿದೆ. ಆಯಪ್ ಅನ್ನು ಪ್ರತ್ಯೇಕವಾಗಿ "ಹವಾಮಾನ ಮುನ್ಸೂಚನೆ ಮಾಹಿತಿಗಾಗಿ ಮತ್ತು ಬಹು ಸ್ಥಳಗಳ ಚಂದಾದಾರಿಕೆ ಸೌಲಭ್ಯದೊಂದಿಗೆ ವಿಪತ್ತು ಎಚ್ಚರಿಕೆಗಳನ್ನು ಸ್ವೀಕರಿಸಲು ಬಳಸಬಹುದು". ಎಂದು ಮೋದಿ ತಿಳಿಸಿದ್ದಾರೆ.

ಬಳಕೆದಾರರು ತಮ್ಮ ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಬ್ರೌಸರ್‌ಗಳಲ್ಲಿ ಬ್ರೌಸರ್ ನೋಟಿಫಿಕೇಶ್‌ ಅನ್ನು ಪಡೆಯುತ್ತಾರೆ. ಬಳಕೆದಾರರು ವಿಪತ್ತು ಸಂಬಂಧಿತ ಮಾಹಿತಿಯ ಅಧಿಸೂಚನೆಯನ್ನು ತತ್‌ ಕ್ಷಣವೇ ಪಡೆಯಬಹುದು ಎಂದು ವೆಬ್‌ಸೈಟ್ ನಲ್ಲಿ ಉಲ್ಲೇಖ ಮಾಡಿದೆ.

ಆರ್‌ಎಸ್‌ಎಸ್ ಫೀಡ್‌ನಲ್ಲಿಯೂ ಎಚ್ಚರಿಕೆಯನ್ನು ಪ್ರಕಟಿಸಲಾಗುತ್ತದೆ. ಅಲ್ಲದೆ ಸುದ್ದಿ ಸಂಸ್ಥೆಗಳು ಇದಕ್ಕೆ ಚಂದಾದಾರರಾಗಿದ್ದರೆ ಮುಂಚಿತವಾಗಿ ಈ ಬಗ್ಗೆ ಮಾಹಿತಿ ಪ್ರಕಟ ಮಾಡಬಹುದಾಗಿದೆ. ಈ ಮೂಲಕ ಮುಂದೆ ಆಗುವ ದೊಡ್ಡ ಮಟ್ಟದ ಅನಾಹುತಗಳನ್ನು ತಪ್ಪಿಸಬಹುದಾಗಿದೆ.

ವೆಬ್‌ಸೈಟ್‌ನಲ್ಲಿ ಪ್ರಕಟವಾದ ಮಾಹಿತಿಯ ಪ್ರಕಾರ, ಆಪ್‌ ಅನ್ನು ಉತ್ತರ ಪ್ರದೇಶದಲ್ಲಿ ಸುಮಾರು 5.4 ಕೋಟಿ ಜನರು, ರಾಷ್ಟ್ರ ರಾಜಧಾನಿಯಲ್ಲಿ 4.6 ಕೋಟಿ ಜನರು, ಮಹಾರಾಷ್ಟ್ರದಲ್ಲಿ 1.1 ಕೋಟಿ ಜನರು ಡೌನ್‌ಲೋಡ್ ಮಾಡಿದ್ದಾರೆ.

ನೀವೂ ಆ್ಯಪ್ ಮೂಲಕ ಮಳೆ ಮುನ್ಸೂಚನೆ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.cdotindia.capsachet

ನಂತರ ಆ್ಯಪ್ ಡೌನಲ್ಲೋಡ್ ಮಾಡಿಕೊಳ್ಳಿ

ನಂತರ ಮುಂದೆ ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಮುಂದೆ ಮೇಲೆ ಕ್ಲಿಕ್ ಮಾಡಿ

ನಂತರ /(Yes) ಮಾರ್ಕ್ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಸಂಖ್ಯೆ ಅಥವಾ ಇಮೇಲ್ ಐಡಿಯನ್ನು ನಮೂದಿಸಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ

ನಂತರ ಈ ಕೆಳಗಿನಂತೆ ನಿಮಗೆ ಹವಾಮಾನ ಮಾಹಿತಿ ಸಿಗಲಿದೆ

]]>
Sun, 27 Apr 2025 19:23:37 +0530 shivuagrico
Free vegetable seed kit&ರೈತರಿಗೆ ಉಚಿತವಾಗಿ 2 ಸಾವಿರ ಮೊತ್ತದ ತರಕಾರಿ ಬೀಜ ವಿತರಣೆಗೆ ಅರ್ಜಿ ಆಹ್ವಾನ https://krushirushi.in/Free-vegetable-seed-kit-2055 https://krushirushi.in/Free-vegetable-seed-kit-2055 Free vegetable seed kit-ರೈತರಿಗೆ ಉಚಿತವಾಗಿ 2 ಸಾವಿರ ಮೊತ್ತದ ತರಕಾರಿ ಬೀಜ  ವಿತರಣೆಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ರೂ. 2000/- ಮೊತ್ತದ ತರಕಾರಿ ಬೀಜಗಳ ಕಿಟ್‌ನ್ನು ವಿತರಣೆ ಮಾಡಲಾಗುತ್ತಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಂದ ಅರ್ಜಿ ಆಹ್ವಾನಿಸಿದೆ.


ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಆಧಾರ್‌ಕಾರ್ಡ್ ಜೇರಾಕ್ಸ್, ಬ್ಯಾಂಕ್ ಪಾಸ್ ಬುಕ್ ಜೇರಾಕ್ಸ್, ಜಾತಿ ಪ್ರಮಾಣ ಪತ್ರ(ಪ.ಜಾ/ಪ.ಪಂ.ದವರಿಗೆ ಮಾತ್ರ) ಗಳನ್ನು ಸಲ್ಲಿಸಿ ಫೆ. 11 ರಿಂದ ತರಕಾರಿ ಬೀಜಗಳ ಕಿಟ್‌ನ್ನು ಪಡೆಯುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Horticulture-department-schemes

ತೋಟಗಾರಿಕೆ ಇಲಾಖೆಯಿಂದ(Horticulture department schemes) ಸಣ್ಣ ಟ್ರ್ಯಾಕ್ಟ‌ರ್(Mini  tractor)
• ಡ್ರಾಗನ್ ಪೂಟ್(Dragon fruit), ಈರುಳ್ಳಿ ಶೇಖರಣಾ ಘಟಕಕ್ಕೆ (Onion storage)ಸಹಾಯಧನ
• ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ(green house) ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ  ನೀರುಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.


ಎಲ್ಲಿ ಅರ್ಜಿ ಸಲ್ಲಿಸಬೇಕು

ಆಸಕ್ತ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ (Horticulture department)ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ಅರ್ಜಿದಾರರ ಅಧಾರ್ ಕಾರ್ಡ್‌ ಪ್ರತಿ.
• ಬ್ಯಾಂಕ್‌ ಪಾಸ್ ಬುಕ್ ಪ್ರತಿ.
• ಪೋಟೋ.
• ಪಹಣಿ/ಉತಾರ್/RTC.
ರೇಷನ್ ಕಾರ್ಡ ಪ್ರತಿ.
ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.


ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM);

ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(Pradna mantri krishi sinchayi yojane);

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ(drip irrigation) ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್‍ರವರೆಗೆ ಶೇಕಡಾ 90%) ಸಹಾಯಧನ.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ (NAREGA)ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ(PMKVY) ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ(NHM) ಸಮುದಾಯ ಕೃಷಿಹೊಂಡ(Farm pond), ಕೃಷಿಹೊಂಡ, ಪ್ಯಾಕ್‌ಹೌಸ್(Pack house), ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್‌ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) (Fiber doti)ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


 ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾ‌ರ್ ಕಾರ್ಡ್ (Aadhaar card) ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ

https://horticulturedir.karnataka.gov.in/info-2/Facilities+available+to+farmers/kn



ಹೆಚ್ಚಿನ ಮಾಹಿತಿಗಾಗಿ  ತೋಟಗಾರಿಕೆ ಇಲಾಖೆ ಕಚೇರಿಯನ್ನು
ಸಂಪರ್ಕಿಸುವುದು. 

]]>
Sun, 27 Apr 2025 15:26:58 +0530 shivuagrico
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ&Input subsidy for croploss https://krushirushi.in/Input-subsidy-for-croploss-2057 https://krushirushi.in/Input-subsidy-for-croploss-2057 ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss

 

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Sun, 27 Apr 2025 06:00:33 +0530 shivuagrico
ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ&Cattle shed subsidy https://krushirushi.in/Cattle-shed-subsidy-2056 https://krushirushi.in/Cattle-shed-subsidy-2056 ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy 

ರಾಜ್ಯ ಸರ್ಕಾರವು ಸಾಮಾನ್ಯ ಜನರ ಮತ್ತು ಕೂಲಿ ಕಾರ್ಮಿಕರ ಏಳಿಗೆಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು (MGNAREGA)ಜಾರಿಗೆ ತಂದಿದ್ದಾರೆ.

ಮಹಾತ್ಮ ಗಾಂಧಿ ನರೇಗಾ ಯೋಜನೆ(NAREGA) ಅಡಿ ವೈಯಕ್ತಿಕ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಯ ಈ ಕೆಳಕಂಡ ವರ್ಗಗಳಲ್ಲಿ ಯಾವುದಾದರೂ ಒಂದು ವರ್ಗದಲ್ಲಿ ಅರ್ಹರಾಗಿರತಕ್ಕದ್ದು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ
ಅಲೆಮಾರಿ ಬುಡಕಟ್ಟುಗಳು
ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು
ಮಹಿಳಾ ಪ್ರಧಾನ ಕುಟುಂಬಗಳು
ವಿಕಲಚೇತನ ಕುಟುಂಬಗಳು
ಭೂ ಸುಧಾರಣಾ ಫಲಾನುಭವಿಗಳು
ವಸತಿ ಯೋಜನೆಗಳ ಫಲಾನುಭವಿಗಳು
ಅರಣ್ಯ ಹಕ್ಕು ಕಾಯಿದೆ 2006ರ ಫಲಾನುಭವಿಗಳು
ಸಣ್ಣ ಮತ್ತು ಅತಿ ಸಣ್ಣ ರೈತರು

 ಫಲಾನುಭವಿಯು ವೈಯಕ್ತಿಕ ಸೌಲಭ್ಯ ಪಡೆಯಲು
 ಫಲಾನುಭವಿಯು ಕಡ್ಡಾಯವಾಗಿ ನರೇಗಾ ಯೋಜನೆಯ ಜಾಬ್ ಕಾರ್ಡ್(Job card) ಹೊಂದಿರಬೇಕು


 ಫಲಾನುಭವಿಗೆ ನೀಡಲಾದ ವೈಯಕ್ತಿಕ ಕಾಮಗಾರಿಯಲ್ಲಿ ಆತನ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಾದರು ಕೆಲಸ ನಿರ್ವಹಿಸಬೇಕು
 ನರೇಗಾ ಯೋಜನೆಯಡಿ ಫಲಾನುಭವಿಕೆ ನೀಡಬಹುದಾದ ವಯಕ್ತಿಕ ಕಾಮಗಾರಿಗಳ ಗರಿಷ್ಠ ಮಟ್ಟದ ಮಿತಿಯನ್ನು 2 ಲಕ್ಷಗಳಿಗೆ ನಿಗದಿಪಡಿಸಿ ಸದರಿ ಗರಿಷ್ಠ ಮೊತ್ತದ  ಮಿತಿಯನ್ನು ಹೆಚ್ಚಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗಿರುತ್ತದೆ


 ಯೋಜನೆ ಅಡಿ ನೊಂದಾಯಿತವಾದ ಒಂದು ವರ್ಷ ಕುಟುಂಬವು ತನ್ನ ಜೀವಿತಾವಧಿಯಲ್ಲಿ ಗರಿಷ್ಠ ಎರಡು ವರೆ ಲಕ್ಷದ ಗಳವರೆಗೆ ಯೋಜನೆ ಅಡಿ ನೀಡಲಾಗುವ ವೈಯಕ್ತಿಕ ಕಾಮಗಾರಿಗಳನ್ನು ಪಡೆದುಕೊಳ್ಳಬಹುದಾಗಿದೆ

ನರೇಗಾ ಯೋಜನೆಯಡಿ ಕೃಷಿಹೊಂಡ ನಿರ್ಮಾಣ

ನರೇಗಾ ಯೋಜನೆ ಅಡಿ ಅರ್ಹ ಫಲಾನುಭವಿಯು ಯೋಜನೆ ಅಡಿ ನಿರ್ಮಿಸಿಕೊಂಡ ಕೃಷಿಹೊಂಡ ಕಾಮಗಾರಿಯನ್ನು ಮುಂದಿನ ಐದು ವರ್ಷಗಳವರೆಗೆ ಮುಚ್ಚತಕ್ಕದ್ದಲ್ಲ.
 ಒಂದು ವೇಳೆ ಫಲಾನುಭವಿಯು ಕೃಷಿ ಹೊಂಡವನ್ನು ಮುಚ್ಚಿದ್ದಲ್ಲಿ ಕೃಷಿಹೊಂಡ ನಿರ್ಮಾಣಕ್ಕಾಗಿ ತಗಲಿದ ವೆಚ್ಚ ಹಾಗೂ ಶೇಕಡ 18ರಷ್ಟು ಬಡ್ಡಿ ಸೇರಿ ಸರ್ಕಾರಕ್ಕೆ ಬರಣ ಮಾಡತಕ್ಕದ್ದು
 ಕೃಷಿ ಹೊಂಡ ನಿರ್ಮಾಣ ಕಾಮಗಾರಿಯನ್ನು ಅನುಷ್ಠಾನಗೊಳಿಸುವ ಮುಂಚೆ ಫಲಾನುಭವಿಗಳಿಂದ ಮುಚ್ಚಳಿಕೆ ಪತ್ರವನ್ನು ಕಡ್ಡಾಯವಾಗಿ ಪಡೆಯತಕ್ಕದ್ದು
 ಕೃಷಿ ಹೊಂಡ ಕಾಮಗಾರಿಗಳ ಕ್ರಿಯಾಯೋಜನೆಯನ್ನು ಅನುಮೋದನೆಗಾಗಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸುವಾಗ ಮುತ್ತಳಿಕೆ ಪತ್ರದ ಪ್ರತಿಯನ್ನು ಲಗತ್ತಿಸುವುದು
 ಕಾಮಗಾರಿಗಳ ಆಯ್ಕೆ ಮಾಡುವಾಗ ತಾಂತ್ರಿಕವಾಗಿ ಸೈಟ್ ಫೀಸಿಬಿಲಿಟಿ ಇರುವುದನ್ನ ಖಚಿತಪಡಿಸಿಕೊಳ್ಳುವುದು
 ಕೃಷಿಹೊಂಡ ಕಾಮಗಾರಿಯ ಅನುಮೋದನೆಯಾದ ಆರ್ಥಿಕ ವರ್ಷದಲ್ಲಿಯೇ ಕಡ್ಡಾಯವಾಗಿ ಪೂರ್ಣಗೊಳಿಸುವುದು
 ಅನುಷ್ಠಾನಗೊಳಿಸುವಾಗ ಮೂರು ಹಂತದ Geo Tag ಮಾಡುವ ಪ್ರಕ್ರಿಯೆಯನ್ನು ನಿಗದಿ ಅವಧಿಯೊಳಗೆ ಪೂರ್ಣಗೊಳಿಸುವುದು ಕಡ್ಡಾಯವಾಗಿರುತ್ತದೆ
 ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಸಿಟಿಜನ್ ಇನ್ಫಾರ್ಮಶನ್ ಬೋರ್ಡ್ ಅಳವಡಿಸತಕ್ಕದ್ದು.

ದನದ ಶೆಡ್ ನಿರ್ಮಾಣಕ್ಕೆ 57,000 ಸಹಾಯಧನ

ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ದನಗಳ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ಯ ಇಲಾಖೆಗಳು ಮೊದಲು ನೀಡುತ್ತಿರುವ ಸಹಾಯಧನವನ್ನು ಹೆಚ್ಚಳ ಮಾಡಿ, ರಾಜ್ಯದ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿಯನ್ನು ನೀಡಲಾಗಿದೆ.

 ಪ್ರಸಕ್ತ ಸಾಲಿನಲ್ಲಿ ಅಂದರೆ 2022ರ ಸಾಲಿನ ಏಪ್ರಿಲ್ 1 ರಿಂದ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೂಲಿ ಕಾರ್ಮಿಕರ ಮೊತ್ತವನ್ನು ರೂಪಾಯಿ 289ರೂ.ನಿಂದ ರೂಪಾಯಿ 309ರೂ.ವರೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಮಿಕರ ಕೂಲಿ ಮೊತ್ತವನ್ನು ಹೆಚ್ಚಿಸಿ ಕೂಲಿಕಾರರಿಗೆ ಸಿಹಿಸುದ್ದಿ ನೀಡಿದೆ.

ರೈತರಿಗೆ ದನದ ಕೊಟ್ಟಿಗೆ(Danada shed) ಅಥವಾ ಶೆಡ್ ನಿರ್ಮಾಣದ ಬಗ್ಗೆ ಅಂದರೆ ಯಾರು ಹಸುಗಳು ಅಥವಾ ಎಮ್ಮೆಗಳನ್ನು ಸಾಕಿದ್ದಾರೋ ಅಥವಾ ನಿಮ್ಮ ಮನೆಯಲ್ಲಿ ಅಥವಾ ನಿಮ್ಮ ಮನೆ ಹಿಂದೆ ಇರುವ ಜಾಗದಲ್ಲಿ ಅಥವಾ ಎಲ್ಲಿ ನಿಮಗೆ ಸಂತ ಜಾಗವಿದೆಯೋ ಅಲ್ಲಿ ನೀವು ದನದ ಕೊಟ್ಟಿಗೆ ಅಥವಾ ದನದ ಶೆಡ್ ಅನ್ನು ನಿರ್ಮಾಣ ಮಾಡಲು ಪಂಚಾಯಿತಿ ವತಿಯಿಂದ ರೈತರಿಗೆ ಮತ್ತು ಆಸಕ್ತರಿಗೆ ಸಹಾಯಧನ ನೀಡಲಾಗುತ್ತದೆ.

ಸಾಮಾನ್ಯ ವರ್ಗದ ಜನರಿಗೆ ಸರಿ ಸುಮಾರು ರೂಪಾಯಿ 20,000 ರೂಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ವತಿಯಿಂದ ಅದನ್ನು ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸುಮಾರು 43,000ರೂಗಳ ಸಹಾಯಧನವನ್ನು ಈ ರಾಜ್ಯ ಸರ್ಕಾರದ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.

 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಪಂಚಾಯಿತಿ ಕಡೆಯಿಂದ ನೀಡುವ ಈ ಒಟ್ಟು ಮೊತ್ತದಲ್ಲಿ ಅಂದರೆ ಈ 43,000ರೂ.ಗಳಲ್ಲಿ, ಫಲಾನುಭವಿ ರೈತರಿಗೆ ಸುಮಾರು 8,996ರೂ.ಗಳನ್ನು ಅವರ ಕೂಲಿ ಮೊತ್ತವಾಗಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.

ಈ ಸಹಾಯಧನವನ್ನು ನರೇಗಾ ಕಾರ್ಡ್ ಹೊಂದಿರುವ ರೈತರಿಗೆ ಅಥವಾ ಅರ್ಜಿದಾರರಿಗೆ ಮಾತ್ರ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಶೆಡ್ ಅಥವಾ ದನದ ಕೊಟ್ಟಿಗೆ ನಿರ್ಮಾಣ ಮಾಡಲಿಕ್ಕೆ ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಉಳಿದ ಮೊತ್ತವನ್ನು ಅಂದರೆ ಉಳಿದ 34,000ರೂ.ಗಳನ್ನು ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.

ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಾಮಾನ್ಯ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಇದರ ಅರ್ಧ ಮೊತ್ತ ಸಿಗುತ್ತಿತ್ತು. ಅಂದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ರೂಪಾಯಿ 8,996ರೂ.ಗಳ ಕೂಲಿಯನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಲ್ಲರಿಗೂ ಸಮಾನವಾದ ಕೂಲಿಯನ್ನು ನೀಡಲಾಗುತ್ತದೆ.

ಆದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಿಗುವ ಉಳಿದ 34,000ರೂ.ಗಳ ಹಣದಲ್ಲಿ ಸಾಮಾನ್ಯ್ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಈ 34,000ರೂ.ಗಳಲ್ಲಿ ಕೇವಲ ಅರ್ಧ ಮೊತ್ತವನ್ನು ನೀಡಲಾಗುತ್ತಿತ್ತು.

      ಅಂದರೆ ಸರಿಸುಮಾರು 20,000ರೂ.ಗಳನ್ನು ಸಾಮಾನ್ಯ ವರ್ಗದವರಿಗೆ ಅಥವಾ ಜನರಲ್ ಕೆಟಗರಿಯವರಿಗೆ ಈ ಯೋಜನೆಯ ಅಡಿಯಲ್ಲಿ ಪಂಚಾಯಿತಿಯ ಕಡೆಯಿಂದ ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭ್ಯರ್ಥಿಗಳಿಗೆ ರೂಪಾಯಿ 43,000ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ.

 

ರೈತರು ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ದನದ ಕೊಟ್ಟಿಗೆ ಅಥವಾ ಶೆಡ್ ನ ಅಳತೆ ಎಷ್ಟಿರಬೇಕು?

• ರೈತರು ಈ ಯೋಜಯಡಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ಕಟ್ಟುವ ದನದ ಕೊಟ್ಟಿಗೆ ಅಥವಾ ಶೆಡ್ 5 ಫೀಟ್ ಎತ್ತರದ ಗೋಡೆಯನ್ನು ಹೊಂದಿರಬೇಕು.

• ಹಸುಗಳಿಗೆ ಮೇವು ಹಾಗೂ ನೀರಿನ ವ್ಯವಸ್ಥೆಗಾಗಿ ಗೋದಲಿಯನ್ನು ನಿರ್ಮಾಣ ಮಾಡಿರಬೇಕು.

• ಜಾನುವಾರುಗಳಿಗೆ ಶೆಡ್ ನಲ್ಲಿ ಗಾಳಿ ಮತ್ತು ಬೆಳಕು ಆಡಲು ಕೊಟ್ಟಿಗೆಗೆ ಶೆಡ್ ಶೀಟ್ಗಳನ್ನು ಹಾಕಬೇಕು.

•ಇವೆಲ್ಲವುದರ ಜೊತೆಗೆ ನೀವು ಈ ಯೋಜನೆಯಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನರೇಗಾ ನಾಮಫಲಕವನ್ನು ಕಡ್ಡಾಯವಾಗಿ ಹಾಕಬೇಕಾಗಿರುತ್ತದೆ.

ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಿಕೊಳ್ಳಲು ರೈತರು ಮೊದಲನೆಯದಾಗಿ ತಮಗೆ ಸಂಬಂಧಪಟ್ಟ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ. ಅಂದರೆ ಈ ಯೋಜನೆಯಡಿಯಲ್ಲಿ ಯಾರ್ಯಾರು ಸಹಾಯ ಧನವನ್ನು ಪಡೆಯಬೇಕೆಂದು ಕೊಂಡಿದ್ದರೋ ಅಥವಾ ಈ ಯೋಜನೆಯ ಫಲಾನುಭವಿಯಾಗಲು ಬಯಸುವಂತಹ ಅರ್ಜಿದಾರರು ತಮ್ಮ ಹೆಸರನ್ನು ನಿಮಗೆ ಹತ್ತಿರವಿರುವ ಅಥವಾ ನಿಮಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಬೇಕಾಗಿರುತ್ತದೆ. 

• ಪ್ರತಿವರ್ಷ ಜಾರಿಗೊಳಿಸುವ ಈ ಯೋಜನೆಯಲ್ಲಿ ನಿಮ್ಮ ಹೆಸರನ್ನು ಸೇರಿಸಬೇಕು. ಅಂದಾಗ ಮಾತ್ರ ನೀವು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.

• ಇದಾದನಂತರ ಸಂಬಂಧಪಟ್ಟ ಪಂಚಾಯಿತಿಯ ಅಧಿಕಾರಿಗಳು ಬಂದು ನೀವು ದನದ ಕೊಟ್ಟಿಗೆ ಅಥವಾ ಶೆಡ್ಕಟ್ಟಬೇಕೆಂದು ಕೊಂಡಿರುವ ಖಾಲಿ ಜಾಗಕ್ಕೆ ಬಂದು ಭೇಟಿ ನೀಡಿ, ಆ ಜಾಗದ GPS ಅನ್ನು ಮಾಡಿ, ಆ ಜಾಗದ ಸರ್ವೆ ಮಾಡಿ ನಿಮಗೆ ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಅನುಮತಿಯನ್ನು ನೀಡುತ್ತಾರೆ.

 • ಅದಾದ ನಂತರ ನೀವು ಕೊಟ್ಟಿಗೆ ಕಟ್ಟಲು ಬೇಕಾಗುವ ಸಾಮಗ್ರಿಗಳನ್ನು ಪಂಚಾಯಿತಿ ನೀಡುವ ಸಹಾಯಧನದಲ್ಲಿ ತಂದು ನಿಮ್ಮ ಕೊಟ್ಟಿಗೆ ಕಟ್ಟುವ ಕೆಲಸವನ್ನು ಪ್ರಾರಂಭಿಸಬಹುದು. 

• ನೀವು ಕೊಟ್ಟಿಗೆ ಕಟ್ಟುವ ಕೆಲಸವನ್ನು ಶುರು ಮಾಡುವ ಮೊದಲು ಒಂದು ಕಲ್ಲಿನ ಬೋರ್ಡನ್ನು ಅಂದರೆ ನರೇಗಾ ನಾಮಫಲಕವನ್ನು ಬರೆಸಬೇಕಾಗಿರುತ್ತದೆ.

  ಈ ಬೋರ್ಡ್ ನೀವು ಯಾವ ಯೋಜನೆಯಡಿ ಈ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದೀರಿ.ಎಂಬುದನ್ನು ಸೂಚಿಸುತ್ತದೆ.

ಇದರಲ್ಲಿ ನೀವು ಯೋಜನೆ ಪಡೆಯುತ್ತಿರುವ ವರ್ಷ, ಗ್ರಾಮ ಪಂಚಾಯಿತಿ ಹೆಸರು, ತಾಲೂಕು ಮತ್ತು ಜಿಲ್ಲೆಯನ್ನು ಒಳಗೊಂಡಿರುತ್ತದೆ.

 ಈ ನರೇಗಾ ನಾಮಫಲಕಾದಲ್ಲಿ ಫಲಾನುಭವಿಯ ಹೆಸರು ನಮೂದಿಸಲಾಗಿರುತ್ತದೆ.

 ಹಾಗೂ ಅದೇ ರೀತಿ ಫಲಾನುಭವಿಯು ಈ ನರೇಗಾ ಉದ್ಯೋಗ ಖಾತರಿ ಯೋಜನೆಯನ್ನು ಪಡೆದುಕೊಳ್ಳುತ್ತಿರುವ ಕಾಮಗಾರಿ ಸಂಕೇತವನ್ನು ಒಳಗೊಂಡಿರುತ್ತದೆ.

 ಈ ನರೇಗಾ ನಾಮಫಕದಲ್ಲಿ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಒಟ್ಟು ಬಿಡುಗಡೆಯಾದ ಮೊತ್ತ, ಎಷ್ಟು ಬಿಡುಗಡೆಯಾಗಿದೆ? ಯಾವುದಕ್ಕೆಲ್ಲ ಬಿಡುಗಡೆಯಾಗಿದೆ? ಖರ್ಚಾದ ಮೊತ್ತ ಮತ್ತು ಕೊಟ್ಟಿಗೆ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳ ಮೊತ್ತ, ಎಲ್ಲವನ್ನು ಒಳಗೊಂಡಿರುತ್ತದೆ.

 

  ನರೇಗಾ ಯೋಜನೆಯ ಅಡಿಯಲ್ಲಿ ಸಹಾಯಧನ ಪಡೆದುಕೊಳ್ಳಲು ದನದ ಕೊಟ್ಟಿಗೆ ಹೇಗಿರಬೇಕು? ಅದರ ಉದ್ದ ಮತ್ತು ಅಳತೆಗಳು ಎಷ್ಟಿರಬೇಕು? 

* ದನದ ಕೊಟ್ಟಿಗೆಯ ಅಗಲವು ಸುಮಾರು ನಾಲ್ಕು ಮೀಟರುಗಳಷ್ಟು ಇರಬೇಕು.

* ದನದ ಕೊಟ್ಟಿಗೆ ಅಥವಾ ಶೆಡ್ನ ಉದ್ದವು ಏಳು ಮೀಟರ್ಗಳಷ್ಟು ಇರಬೇಕು.

*ಅಂದರೆ ಸಾಮಾನ್ಯವಾಗಿ 22 ಅಡಿ ಉದ್ದ ಮತ್ತು13 ಅಡಿ ಅಗಲವನ್ನು ಹೊಂದಿರಬೇಕಾಗುತ್ತದೆ.

* ದನದ ಕೊಟ್ಟಿಗೆಯು ಕನಿಷ್ಠ ಅಗಲ ಮತ್ತು ಉದ್ದವಗಳನ್ನು ಹೊಂದಿರಬೇಕಾಗುತ್ತದೆ.

* ಇದಕ್ಕಿಂತ ಕಡಿಮೆ ಉದ್ದ ಮತ್ತು ಅಗಲಗಳ ಅಳತೆಗಳನ್ನು ಹೊಂದಿದ್ದರೆ ನಿಮಗೆ ಸಿಗುವ ಸಹಾಯಧನದಲ್ಲಿ ಮೊತ್ತವು ಕಡಿಮೆಯಾಗುತ್ತದೆ. ಅಂದರೆ ನಿಮಗೆ ಸಿಗುತ್ತಿರುವ ಸಾಮಗ್ರಿ ಮೊತ್ತದಲ್ಲಿ ಸಹಾಯಧನ ಕಡಿಮೆಯಾಗುತ್ತದೆ.

* ಇದಕ್ಕಿಂತ ಜಾಸ್ತಿ ಉದ್ದ ಮತ್ತು ಅಗಲಗಳನ್ನು ಹೊಂದಿರಬಹುದು. ಆದರೆ ಈ ಕನಿಷ್ಠ ಅಳತೆಗಳ ಕೆಳಗೆ ಅಳತೆಗಳನ್ನು ಹೊಂದಿರಬಾರದು.

 

* ದನದ ಕೊಟ್ಟಿಗೆ ನಿರ್ಮಾಣದ ಸಮಯದಲ್ಲಿ ದನಗಳನ್ನು ಕಟ್ಟುವ ಜಾಗದಲ್ಲಿ ನೆಲವನ್ನು ಕಾಂಕ್ರೀಟ್ ನಿಂದ ಮಾಡಿರಬೇಕಾಗಿರುತ್ತದೆ. ಯಾವುದೇ ತರದ ಚಪ್ಪಡಿ ಕಲ್ಲುಗಳನ್ನು ಮತ್ತು ಇನ್ನಿತರೆ ರಬ್ಬರ್ ಮ್ಯಾಟ್ ಅಥವಾ ನೆಲಹಾಸುಗಳನ್ನು ಬಳಸುವಂತಿಲ್ಲ. ನೀವು ನೆಲವನ್ನು ಕಾಂಕ್ರಿಟ್ ನಿಂದ ಮಾಡಿರದಿದ್ದರೆ ನಿಮಗೆ ಸಹಾಯಧನವನ್ನು ನೀಡಲು ಬರುವುದಿಲ್ಲ.

 

ಮೊದಲು ನೀವು ದನದ ಕೊಟ್ಟಿಗೆ ನಿರ್ಮಾಣ ಮಾಡಬೇಕೆಂದುಕೊಳ್ಳುವ ಖಾಲಿ ಜಾಗದಲ್ಲಿ ಫೋಟೋ ತೆಗೆಯಬೇಕು. ನಂತರ 40MM ಜೆಲ್ಲಿ ಕಲ್ಲು ಅಂದರೆ(ಕಡಿಗಳು) ಗಳನ್ನು ಹಾಕಿ ಸಮತಟ್ಟು ಮಾಡಬೇಕಾಗಿರುತ್ತದೆ. ಇದಾದ ನಂತರ ಅದರ ಮೇಲೆ ಕಾಂಕ್ರೆಟ್ ನಿಂದ ನೆಲವನ್ನು ಮುಚ್ಚಬೇಕಾಗುತ್ತದೆ.

 

* ದನಗಳ ಕೊಟ್ಟಿಗೆಯಲ್ಲಿ ಮೇವು ಅಥವಾ ನೀರಿನ ಸೌಲಭ್ಯಕ್ಕಾಗಿ ಗೋದಲಿಯನ್ನು ಇಟ್ಟಿಗೆಯನ್ನು ಬಳಸಿ ಕಟ್ಟಬೇಕು. ಕಟ್ಟಿದ ನಂತರ ಇಟ್ಟಿಗೆಗಳನ್ನು ಪ್ಲಾಸ್ಟರ್ ನಿಂದ ಮುಚ್ಚಬೇಕು.

 

* ಹಾಗೆಯೇ ದನಗಳನ್ನು ಗೋದಲಿಗೆ ಕಟ್ಟಲು ಕಬ್ಬಿಣದ ಬಳೆಗಳನ್ನು ಸಹ ಬಳಸಬಹುದು.

 

* ದನಗಳ ಮೂತ್ರ ಮತ್ತು ಕೊಟ್ಟಿಗೆ ತೊಳೆದ ನಂತರ ಅದರ ನೀರು ಸುಲಭವಾಗಿ ಹೋಗಲು ಒಂದು ಗುಂಡಿ ಅಥವಾ ಒಂದು ಚರಂಡಿ ವ್ಯವಸ್ಥೆಯನ್ನು ಮಾಡಬೇಕಾಗಿರುತ್ತದೆ. ಅಥವಾ ನಿಮಗೆ ಚರಂಡಿ ವ್ಯವಸ್ಥೆ ಇಲ್ಲದಿದ್ದಲ್ಲಿ ನೀರನ್ನು ಇಂಗು ಗುಂಡಿಗೆ ಬಿಡಬಹುದು.

 

* ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ದನದ ಕೊಟ್ಟಿಗೆಯ ಸುತ್ತಲೂ ಗೋಡೆಯನ್ನು ಕಟ್ಟಬೇಕಾಗುತ್ತದೆ.

 

* ಈ ಕೊಟ್ಟಿಗೆಯನ್ನ ನಿರ್ಮಾಣ ಮಾಡಲು ಸಾಮಾನ್ಯವಾಗಿ 22,000ರೂ.ಗಳ ಖರ್ಚು ಬರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಒಟ್ಟು ಸಹಾಯಧನ 43,000ರೂ.ಗಳು ಬರುತ್ತದೆ.

ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನ ಹೆಚ್ಚಳ ಮಾಡಿದ ನಂತರ ಒಟ್ಟು ಸಹಾಯಧನವಾಗಿ 57,000 ರೂ ಸಿಗುತ್ತದೆ. ಈ ಮೊತ್ತವನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೂ ಸಮವಾಗಿ ನೀಡಲಾಗುತ್ತದೆ. ಈ ಮೊತ್ತದಲ್ಲಿ ಅಂದರೆ ಒಟ್ಟಾರೆ 57,000ರೂ.ಗಳಲ್ಲಿ ಸರಿ ಸುಮಾರು 10,556ರೂ.ಗಳನ್ನು ಕೂಲಿ ಮೊತ್ತವಾಗಿ ಈ ಯೋಜನೆಯಡಿ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಸುಮಾರು 46,644ರೂ.ಗಳನ್ನು ಈ ಯೋಜನೆಯಡಿಯಲ್ಲಿ ದನದ ಕೊಟ್ಟಿಗೆ ಅಥವಾ ದನದಶೆಡ್ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಈ ಯೋಜನೆಯ ಅಡಿಯಲ್ಲಿ ಸಹಾಯಧನ ನೀಡಲಾಗುತ್ತದೆ.

ಫಲಾನುಭವಿಗಳು ಜಾನುವಾರು ಶೆಡ್ ಅಥವಾ ಕೊಟ್ಟಿಗೆಯನ್ನು ನಿರ್ಮಿಸಿಕೊಳ್ಳಲು,

#ಕನಿಷ್ಠ 4 ಜಾನುವಾರುಗಳನ್ನು ಹೊಂದಿರಬೇಕು.

#ಸಂಬಂಧಪಟ್ಟ ಪಶುವೈದ್ಯಾಧಿಕಾರಿಗಳಿಂದ ಜಾನುವಾರು ಇರುವ ಕುರಿತ ದೃಢೀಕರಣ ಪತ್ರವನ್ನು ಪಡೆಯಬೇಕು.

#ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಉದ್ಯೋಗ ಖಾತರಿ ಚೀಟಿ ಪುಸ್ತಕವನ್ನು ಹೊಂದಿರಬೇಕು.

#ಈ ಮೇಲಿನ ಉಲ್ಲೇಕಿಸಿದ ದಾಖಲಾತಿಗಳೊಂದಿಗೆ ಸ್ಥಳೀಯ ಗ್ರಾಮ ಪಂಚಾಯತಿಗೆ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

# ಗ್ರಾಮ ಪಂಚಾಯಿತಿಯವರ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಫಲಾನುಭವಿಯ ಹೆಸರು ಸೇರಿಸಿಕೊಂಡು ಮೇಲಾಧಿಕಾರಿಗಳಿಂದ ಅನುಮೋದನೆ ಪಡೆದ ನಂತರ ರೈತರು ಅವರ ದನದ ಕೊಟ್ಟಿಗೆಯ ಕಾಮಗಾರಿಯನ್ನು ಪ್ರಾರಂಭಿಸಬೇಕು.

# ಈ ಹಿಂದೆ ಉದ್ಯೋಗ ಖಾತರಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 43,000ರೂ.ಗಳ ಸಹಾಯಧನ ಹಾಗೂ ಸಾಮಾನ್ಯ ವರ್ಗದವರಿಗೆ 19,000 ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನೀಡಲಾಗುತ್ತಿತ್ತು.

ಈ ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚಿಸಿದ ಸಹಾಯಧನದ ಬಗ್ಗೆ ತಿಳಿಯಬೇಕೆಂದರೆ,

ಸಾಮಾನ್ಯ ವರ್ಗದವರಿಗೂ ಸಹ 57,000ರೂ.ಗಳ ಸಹಾಯಧನ ಈ ಯೋಜನೆ ಅಡಿಯಲ್ಲಿ ನೀಡಲಾಗುವುದು. ಸಾಮಾನ್ಯವಾಗಿ 4 ಕ್ಕಿಂತ ಹೆಚ್ಚು ಜಾನುವಾರು ಸಾಕಣೆ ಮಾಡುವವರು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.

ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಜಾನುವಾರು ಸೆಡ್ ನಿರ್ಮಾಣಕ್ಕೆ ಸಹಾಯಧನದ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ರಾಜ್ಯದಲ್ಲಿ ಈ ಯೋಜನೆಯ ಲಾಭವನ್ನು ಪಡೆದುಕೊಂಡು ಸಹಸ್ರಾರು ಕುಟುಂಬಗಳು ಶೆಡ್ ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡು ಜಾನುವಾರು ಸಾಕಣೆಯೊಂದಿಗೆ ಉತ್ತಮ ಆದಾಯ ಮಾಡಿಕೊಳ್ಳುತ್ತಿದ್ದಾರೆ.

ಇದೀಗ ದನದ ಶೆಡ್ ನಿರ್ಮಾಣ ಮಾಡಿಕೊಳ್ಳಲು ಸಹಾಯ ಧನ ಹೆಚ್ಚಿಸಿದೆ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಅಥವಾ ಸಂಬಂಧಪಟ್ಟ ಪಂಚಾಯಿತಿಯನ್ನು ಸಂಪರ್ಕಿಸಿರಿ.

]]>
Sat, 26 Apr 2025 17:42:26 +0530 shivuagrico
Bele parihara list&ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ,ನಿಮಗೇಷ್ಟು ಜಮಾ ಚೆಕ್ ಮಾಡಿ https://krushirushi.in/Bele-parihara-2054 https://krushirushi.in/Bele-parihara-2054 Bele parihara-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Sat, 26 Apr 2025 05:46:56 +0530 shivuagrico
Weather report&ಈ 10 ಜಿಲ್ಲೆಗಳಲ್ಲಿ ಮಳೆ,ಉಳಿದೆಡೆ ಬಿಸಿಲಿನಿಂದ ಜನ ತತ್ತರ https://krushirushi.in/Weather-report-2053 https://krushirushi.in/Weather-report-2053 ಗಳೂರು: ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ (ಮೇ 1ರವರೆಗೆ) ಉತ್ತಮ ಮಳೆಯಾಗುವ (Karnataka Rains) ಮುನ್ಸೂಚನೆ ಸಿಕ್ಕಿದೆ. ಏಪ್ರಿಲ್‌ 26ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಮತ್ತು ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿಗುಡುಗು ಸಹಿತ ಗುಡುಗು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ° C ಮತ್ತು 23 ° C ಆಗಿರಬಹುದು.

ಏಪ್ರಿಲ್‌ 27ರಂದು ಕರಾವಳಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬಾಗಲಕೋಟೆ, ಬೆಳಗಾವಿ ಸೇರಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆ / ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ.

ಏಪ್ರಿಲ್‌ 28ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ್, ಹಾವೇರಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಏಪ್ರಿಲ್‌ 29ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಯಾದಗಿರಿ, ಗದಗ, ಕೊಪ್ಪಳ, ಹಾವೇರಿ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಏಪ್ರಿಲ್‌ 30ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಗದಗ, ಕೊಪ್ಪಳ, ಹಾವೇರಿ, ಧಾರವಾಡ, ರಾಯಚೂರು ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಮೈಸೂರು, ಚಿಕ್ಕಮಗಳೂರು, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮೇ 1ರಂದು ಕರಾವಳಿಯ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಾವೇರಿ, ಗದಗ, ಕೊಪ್ಪಳ, ಬೆಳಗಾವಿ , ಧಾರವಾಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮಂಡ್ಯ, ಚಾಮರಾಜನಗರ, ರಾಮನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

]]>
Fri, 25 Apr 2025 15:58:38 +0530 shivuagrico
Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ https://krushirushi.in/Tahasildar-verification-approved-2052 https://krushirushi.in/Tahasildar-verification-approved-2052 Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ


ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ

ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ

ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ

Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.

]]>
Fri, 25 Apr 2025 05:51:39 +0530 shivuagrico
50% ಸಬ್ಸಿಡಿಯಲ್ಲಿ ಹೈನುಗಾರಿಕೆ,ಕುರಿ,ಕೋಳಿ,ಮೇಕೆ,ಹಂದಿ ಸಾಕಾಣೆಕೆಗೆ ಅರ್ಜಿ ಆಹ್ವಾನ&Vetarnary department subsidy schemes 2024 https://krushirushi.in/Vetarnary-department-schemes-1251 https://krushirushi.in/Vetarnary-department-schemes-1251 50% ಸಬ್ಸಿಡಿಯಲ್ಲಿ ಹೈನುಗಾರಿಕೆ,ಕುರಿ,ಕೋಳಿ,ಮೇಕೆ,ಹಂದಿ ಸಾಕಾಣೆಕೆಗೆ ಅರ್ಜಿ ಆಹ್ವಾನ-Vetarnary department subsidy schemes 2024

ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ(poultry), ಕುರಿ(Sheep), ಮೇಕೆ(goat), ಹಂದಿ ಸಾಕಾಣಿಕೆ ಮತ್ತು ರಸಮೇವು(Silage) ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.

National livestock mission 


ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ

(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)


 ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ (Kisan credit card)ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.


 ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.

ಅವಶ್ಯಕ ದಾಖಲಾತಿಗಳು :-

1)ಆಧಾರ,

2)ಪಹಣಿ ಪತ್ರ

3)ಬ್ಯಾಂಕ್‌ಖಾತೆ ಸಂಖ್ಯೆ,

ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು

4)ಭಾವ ಚಿತ್ರ.



ಕ್ರ.ಸಂ 

ಘಟಕ 

ಸೌಲಭ್ಯಗಳ ವಿವರ

 

 ಹೈನುಗಾರಿಕೆ 

 

1

ಮಿಶ್ರತಳಿ ದನಗಳ ನಿರ್ವಹಣೆ (1+1)

ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ

 

ಆ. ಸುಧಾರಿತ ಎಮ್ಮೆಗಳ ನಿರ್ವಹಣೆ 
 (1+1)

ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ

 

 ಕುರಿ ಸಾಕಾಣಿಕೆ 

 

2

ಕುರಿಗಳ ನಿರ್ವಹಣೆ (10+01)

 ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ

 

ಕುರಿಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ

 

ಟಗರುಗಳ ನಿರ್ವಹಣೆ (10)

ರೂ. 13,000 ರಂತೆ ಸಾಲ ಸೌಲಭ್ಯ

 

 ಟಗರುಗಳ ನಿರ್ವಹಣೆ (20)

ರೂ. 26,000 ರಂತೆ ಸಾಲ ಸೌಲಭ್ಯ

 

ಮೇಕೆ ಸಾಕಾಣಿಕೆ 

 

3

ಮೇಕೆಗಳ ನಿರ್ವಹಣೆ (10+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ

 

ಮೇಕೆಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ

4

ಹಂದಿ ಸಾಕಾಣಿಕೆ (10)

ರೂ,60,000 ರಂತೆ ಸಾಲ ಸೌಲಭ್ಯ

 

           ಕೋಳಿ ಸಾಕಾಣಿಕೆ 

 

5

ಮಾಂಸದ ಕೋಳಿ ಸಾಕಾಣಿಕೆ

2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ

 

 ಮೊಟ್ಟೆ ಕೋಳಿ ಸಾಕಾಣಿಕೆ

1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.


Vetarnary department subsidy schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?

ಹಾಲು ಉತ್ಪಾದಕರಿಗೆ ಪ್ರೋತ್ಸಾಹ(Milk incentive)
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.

ಲಸಿಕಾ ಕಾರ್ಯಕ್ರಮ(Vaccination program)
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.


ನಾಟಿ ಕೋಳಿ ಮರಿಗಳ ವಿತರಣೆ(Back yard poultry)
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು

ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.


ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.


ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.

ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.


ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.

ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.


ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahvs.karnataka.gov.in/info-2/Schemes+&+Benefits/kn

]]>
Thu, 24 Apr 2025 14:47:38 +0530 shivuagrico
Pmkisan 20th instalment&ಈ ದಿನ ಈ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ ಪಿಎಂ ಕಿಸಾನ್ 20ನೇ ಕಂತು https://krushirushi.in/Pmkisan-20th-instalment-2050 https://krushirushi.in/Pmkisan-20th-instalment-2050 Pmkisan 20th instalment-ಈ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ ಪಿಎಂ ಕಿಸಾನ್ 20ನೇ ಕಂತು

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬ‌ರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 20ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 20th instalment date

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Thu, 24 Apr 2025 05:33:25 +0530 shivuagrico
Cyclone effect&ವಾಯುಭಾರ ಕುಸಿತ ಹಿನ್ನೆಲೆ ಈ ಜಿಲ್ಲೆಗಳಲ್ಲಿ ಎಪ್ರೀಲ್ 29ರವರೆಗೂ ಸುರಿಯಲಿದೆ ಭಾರಿ ಮಳೆ https://krushirushi.in/Cyclone-effect-2049 https://krushirushi.in/Cyclone-effect-2049 Cyclone effect-ವಾಯುಭಾರ ಕುಸಿತ ಹಿನ್ನೆಲೆ ಈ ಜಿಲ್ಲೆಗಳಲ್ಲಿ ಎಪ್ರೀಲ್ 29ರವರೆಗೂ ಸುರಿಯಲಿದೆ ಭಾರಿ ಮಳೆ

ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದ ಈ ಜಿಲ್ಲೆಗಳಲ್ಲಿ ಏ.29 ರವರೆಗೂ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು ಹಾಗೂ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಕಲಬುರಗಿ ಜಿಲ್ಲೆಯಲ್ಲಿ ಇಂದು ಭಾರಿ ಮಳೆಯಾಗಲಿದೆ.

ನಾಳೆ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ತುಮಕೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ.
ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ, ದಾವಣಗೆರೆ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಏ.29 ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಹಾಸನ, ಮೈಸೂರು, ಕೊಡಗು, ತುಮಕೂರು, ಮಂಡ್ಯ, ಚಿಕ್ಕಮಂಗಳೂರು, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ಚಿಕ್ಕಬಳ್ಳಾಪುರದಲ್ಲಿ ಏ.29 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕಾಸರಗೋಡು ತನಕವೂ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿಯ ಗಾಳಿಯ ಒತ್ತಡ ಹೆಚ್ಚಿದ್ದರೆ ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯ ಸಾಧ್ಯತೆಗಳವೆ. 
ಈಗಿನಂತೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಪ್ರಿಲ್ 27ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 27ರ ನಂತರ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಅಲ್ಲಿಯತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಕೊಪ್ಪಳ, ಹಾವೇರಿ ಜಿಲ್ಲೆಯಲ್ಲೂ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಅನಿರೀಕ್ಷಿತ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಎಪ್ರಿಲ್ 27ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.

]]>
Wed, 23 Apr 2025 19:47:24 +0530 shivuagrico
ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ&Aadhaar not linked bele parihara farmers list https://krushirushi.in/Aadhar-not-linked-bele-pariahara-farmers-list-2048 https://krushirushi.in/Aadhar-not-linked-bele-pariahara-farmers-list-2048 ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ-Aadhaar not linked croploss farmers list

15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635 

ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/AadharNotSeededReport.aspx

ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ

]]>
Wed, 23 Apr 2025 12:57:24 +0530 shivuagrico
Gruhalakshmi list&ಈ ಪಟ್ಟಿಯಲ್ಲಿರುವವರಿಗೆ ಈ ದಿನ ಒಟ್ಟಿಗೆ ಜಮಾ ಆಗಲಿದೆ 3 ತಿಂಗಳ ಗೃಹಲಕ್ಷ್ಮಿ ಅನ್ನಭಾಗ್ಯ ಹಣ https://krushirushi.in/Gruhalakshmi-list-2047 https://krushirushi.in/Gruhalakshmi-list-2047 Gruhalakshmi list-ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಗಲಿದೆ 3 ತಿಂಗಳ ಗೃಹಲಕ್ಷ್ಮಿ ಅನ್ನಭಾಗ್ಯ ಹಣ

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಕೂಡಲೇ ಜನರ ಖಾತೆಗೆ ಜಮೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 


ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬುದು ನನ್ನ ಗಮನದಲ್ಲಿದೆ.3 ತಿಂಗಳ ಹಣ ಒಟ್ಟಿಗೆ ಜಮಾ ಮಾಡಲಿದ್ದೇವೆ ಎಂದು ತಿಳಿಸಿದರು.


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Tue, 22 Apr 2025 22:57:32 +0530 shivuagrico
Input subsidy for crop loss&ಕೇಂದ್ರದಿಂದ ಬಂದ 3450 ಕೋಟಿ ರೂಪಾಯಿ ಬೆಳೆ ಪರಿಹಾರ ನೇರ ರೈತರ ಖಾತೆಗೆ ಜಮಾ https://krushirushi.in/Input-subsidy-for-croploss-2046 https://krushirushi.in/Input-subsidy-for-croploss-2046 Input subsidy for crop loss-ಕೇಂದ್ರದಿಂದ ಬಂದ 3450 ಕೋಟಿ ರೂಪಾಯಿ ಬೆಳೆ ಪರಿಹಾರ ನೇರ ರೈತರ ಖಾತೆಗೆ ಜಮಾ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

2023ರ ಮುಂಗಾರು ಹಂಗಾಮಿನಲ್ಲಿ ತೊಗರಿ ನೆಟೆರೋಗದಿಂದ ನಷ್ಟಗೊಂಡ ರಾಜ್ಯದ ರೈತರಿಗೆ ಸರ್ಕಾರವು ₹233 ಕೋಟಿ ಪರಿಹಾರ ವಿತರಿಸಿದೆ. ಕಲಬುರಗಿ, ಯಾದಗಿರಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ರೈತರಿಗೆ ಈ ಸಹಾಯ ಲಭ್ಯವಾಗಿದ್ದು, ಕೃಷಿ ಚಟುವಟಿಕೆ ಪುನಶ್ಚೇತನಗೊಳ್ಳಲು ಇದು ಮಹತ್ವದ ಹೆಜ್ಜೆಯಾಗಿದೆ.

ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Tue, 22 Apr 2025 19:55:45 +0530 shivuagrico
Male nakshatragalu&2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು https://krushirushi.in/Male-nakshatragalu-2025-2044 https://krushirushi.in/Male-nakshatragalu-2025-2044 Male nakshatragalu-2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು


2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-14-4-2025

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-28-4-2025

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2025

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-25-5-2025

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-6-7-2025

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-20-7-2025

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-31-8-2025

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2025

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-27-9-2025

ಉತ್ತಮ ಮಳೆ

14.ಚಿತ್ತ

ದಿನಾಂಕ-11-10-2025

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-24-10-2025

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2025

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs  ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in  website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.     

https://krushirushi.in/contact-us


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ

]]>
Tue, 22 Apr 2025 06:08:04 +0530 shivuagrico
FID&ಸರ್ಕಾರದ ಸಬ್ಸಿಡಿ ಸವಲತ್ತು,ಬೆಳೆಸಾಲ ಹಾಗೂ ಬೆಳೆವಿಮೆಗೆ ಎಫ್ ಐಡಿ ಕಡ್ಡಾಯ,ಆಧಾರ್ ನಂಬರ್ ಹಾಕಿ ನಿಮ್ಮ FID  ತಿಳಿದುಕೊಳ್ಳಿ https://krushirushi.in/FID-2040 https://krushirushi.in/FID-2040 FID-ಸರ್ಕಾರದ ಸಬ್ಸಿಡಿ ಸವಲತ್ತು,ಬೆಳೆಸಾಲ ಹಾಗೂ ಬೆಳೆವಿಮೆಗೆ ಎಫ್ ಐಡಿ ಕಡ್ಡಾಯ,ಆಧಾರ್ ನಂಬರ್ ಹಾಕಿ ನಿಮ್ಮ FID  ತಿಳಿದುಕೊಳ್ಳಿ

ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.

 ಏನಿದು ಫ್ರೂಟ್ಸ್ ನಂಬರ್


 ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.



ನಿಮ್ಮ FID ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx 

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.

FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

 ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್‍ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.

 ಏಕೆ ನೋಂದಾಯಿಸಬೇಕು?


 ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್  ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ


ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.

ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು

]]>
Mon, 21 Apr 2025 20:08:32 +0530 shivuagrico
Bele sala&ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ https://krushirushi.in/Bele-sala-2039 https://krushirushi.in/Bele-sala-2039 Bele sala status-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ-crop loan status 

ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್(Survey number) ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.

 ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ(Bele sala) ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.

 ಸಾಲ(crop loan status)ವಿವರ ಚೆಕ್ ಮಾಡುವುದು ಹೇಗೆ?

 ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು 

https://landrecords.karnataka.gov.in/Service2/

 ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ. 

 ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ

  ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ

ನಂತರ view ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ

ಇದನ್ನೂ ಓದಿ

ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427 

 ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.

 ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.

  ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ.  ಎಂಬ ಮಾಹಿತಿ ಇರುತ್ತದೆ.


 ಈ ಮಾಹಿತಿ ರೈತರಿಗೆ ತುಂಬಾ ಅನುಕೂಲವಾಗಿದೆ ಸರ್ವೇ ನಂಬರ್ ನಮೂದಿಸಿದರೆ ಸಾಕು ರೈತರು ದೇಶದ ಯಾವುದೇ ಮೂಲೆಯಿಂದಲೂ ಮಾಹಿತಿ ಪಡೆಯಬಹುದು. ಕೇವಲ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವ ಮಾಹಿತಿ ಎಲ್ಲವೂ ರೈತರಿಗೆ ಸಿಗಲಿದೆ.

]]>
Mon, 21 Apr 2025 17:56:40 +0530 shivuagrico
Vayubara kusitha&ವಾಯುಭಾರ ಕುಸಿತ,ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಮಳೆ ಅರ್ಭಟ https://krushirushi.in/Vayubara-kusitha-2043 https://krushirushi.in/Vayubara-kusitha-2043 Vayubara kusitha-ವಾಯುಭಾರ ಕುಸಿತ,ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಮಳೆ ಅರ್ಭಟ


ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದ್ದು, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಕಲ್ಲು ಜಿಲ್ಲೆಯ ಕೆಲವು ಕಡೆ ಗುಡಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಉತ್ತರಗಳ ನಾಡಿನ ಅನೇಕ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ.

]]>
Mon, 21 Apr 2025 12:00:39 +0530 shivuagrico
2025 ನೇ ಸಾಲಿನ ಪಿಎಂ ಕಿಸಾನ್ ಕಂತುಗಳ ದಿನಾಂಕ ಪ್ರಕಟ&Pmkisan instalment dates https://krushirushi.in/Pmkisan-instalment-dates-2042 https://krushirushi.in/Pmkisan-instalment-dates-2042 2025 ನೇ ಸಾಲಿನ ಪಿಎಂ ಕಿಸಾನ್ ಕಂತುಗಳ ದಿನಾಂಕ ಪ್ರಕಟ-Pmkisan Kisan instalment dates

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬ‌ರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಡಿಸೆಂಬರ್ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Mon, 21 Apr 2025 05:50:13 +0530 shivuagrico
DBT Karnataka&ಆಧಾರ್ ನಂಬರ್ ಹಾಕಿ ಯಾವ ಯೋಜನೆಯಿಂದ ಎಷ್ಟು ಹಣ ಜಮೆ ಆಗಿದೆ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ https://krushirushi.in/Dbt-Karnataka-2041 https://krushirushi.in/Dbt-Karnataka-2041 Dbt karnataka-ಆಧಾರ್ ನಂಬರ್ ಹಾಕಿ ಯಾವ ಯೋಜನೆಯಿಂದ ಎಷ್ಟು ಹಣ ಜಮೆ ಆಗಿದೆ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಯೋಜನೆಗಳ ಪಟ್ಟಿ ದೊರೆಯಲಿದೆ, ಅದರಲ್ಲಿ ನಿಮಗೆ ಬೇಕಾದ ಯೋಜನೆಯ ಮೇಲೆ ಕ್ಲಿಕ್ ಮಾಡಿ

ಉದಾಹರಣೆಗೆ ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿ(Gruhalakahmi)

ಈ ಕೆಳಗಿನಂತೆ ಇಲ್ಲಿಯವರೆಗೂ ಹಣ ಜಮಾ ಆಗಿರುವ ಮಾಹಿತಿ ತೋರಿಸುತ್ತದೆ.

]]>
Sun, 20 Apr 2025 13:27:51 +0530 shivuagrico
Karnataka rain alert&ಸೈಕ್ಲೋನ್ ಎಫೆಕ್ಟ್ , ಮುಂದಿನ ಮೂರು ದಿನ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ https://krushirushi.in/karnataka-rain-alert-2038 https://krushirushi.in/karnataka-rain-alert-2038

Karnataka rain alert-ಸೈಕ್ಲೋನ್ ಎಫೆಕ್ಟ್ , ಮುಂದಿನ ಮೂರು ದಿನ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ 

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಕಡೆ ಪೂರ್ವ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಏಪ್ರಿಲ್ 20, 21 ರಂದು ಆಲಿಕಲ್ಲು ಸಹಿತ ಮಳೆ ಆಗುವ ಸಾಧ್ಯತೆ ಇದೆ. 


ಏಪ್ರಿಲ್ 24 ರಿಂದ 26 ರವರೆಗೆ ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ. ನಂತರ ಒಂದು ವಾರ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೀದ‌ರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದ್ದು, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಕಲ್ಲು ಜಿಲ್ಲೆಯ ಕೆಲವು ಕಡೆ ಗುಡಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. 
ದಕ್ಷಿಣ ಒಳನಾಡು ಮತ್ತು ಉತ್ತರಗಳ ನಾಡಿನ ಅನೇಕ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಸೋಮವಾರ ಮತ್ತು ಮಂಗಳವಾರ 10ಕ್ಕೂ ಅಧಿಕ ಜಿಲ್ಲೆಗಳಿಗೆ ಯೆ ಲೆಅಲರ್ಟ್ ಘೋಷಿಸಲಾಗಿದೆ. 

ಹಾವಾಮಾನ ಇಲಾಖೆಯ ಮುಂದಿನ ಮೂರು ದಿನ ರಾಜ್ಯದಾದ್ಯಂತ ಗುಡುಗು ಸಹಿತ ಭಾರೀ ಮಳೆ ಆಗಲಿದೆ ಎಂದು ತಿಳಿಸಿದೆ. ಇಂದಿನ ಮುನ್ಸೂಚನೆ ಪ್ರಕಾರ, ಮುಂದಿನ ಮೂರು ಗಂಟೆಗಳಲ್ಲಿ ಚಿತ್ರದುರ್ಗ, ಮೈಸೂರು, ಬೆಳಗಾವಿ, ಕೊಪ್ಪಳ, ವಿಜಯಪುರ, ಗದಗ ಸೇರಿದಂತೆ ಒಂದೆರಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ಇದರಲ್ಲಿ ಕೆಲವೆಡೆ ಆಲಿಕಲ್ಲು ಸಹಿತ ಮಳೆ ಆಗಲಿದೆ ಎಂದು ಇಲಾಖೆ ತಿಳಿಸಿದೆ.


ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚೆನೆ ಇದೆ. ಗಾಳಿಯ ಪ್ರಭಾವ ಹಾಗೂ ಒತ್ತಡ ಹೆಚ್ಚಿದ್ದರೆ ಕಾಸರಗೋಡು ಜಿಲ್ಲೆಯಲ್ಲೂ ಮತ್ತು ದ. ಕ. ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಮೋಡದ ವಾತಾವರಣ ಉಂಟಾಗಿದ್ದು, ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಈಗಾಗಲೇ ಮೋಡದ ವಾತಾವರಣ ಇದ್ದು, ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ. 

ಈಗಿನಂತೆ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗಿನ ಬಹುತೇಕ ಭಾಗಗಳಲ್ಲಿ  ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ  ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಈಗಾಗಲೇ ಮೋಡ ವಾತಾವರಣ ಇದ್ದು, ಗದಗ, ಬಳ್ಳಾರಿ, ದಾವಣಗೆರೆ ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ.
ದಕ್ಷಿಣ ಒಳನಾಡಿನ ಮೈಸೂರು, ಬೆಂಗಳೂರು ಹಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

]]>
Sun, 20 Apr 2025 06:00:31 +0530 shivuagrico
Shakthi yojane smart card&ಇನ್ಮುಂದೆ ಉಚಿತ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ನಡೆಯಲ್ಲ, ಮೊಬೈಲ್ ನಲ್ಲೆ ಹೀಗೆ ಮಾಡಿಕೊಳ್ಳಿ ಉಚಿತ ಸ್ಮಾರ್ಟ್ ಕಾರ್ಡ್ https://krushirushi.in/Shakthi-yojane-smart-card-2036 https://krushirushi.in/Shakthi-yojane-smart-card-2036 Shakthi yojane smart card-ಇನ್ಮುಂದೆ ಉಚಿತ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ನಡೆಯಲ್ಲ, ಮೊಬೈಲ್ ನಲ್ಲೆ ಹೀಗೆ ಮಾಡಿಕೊಳ್ಳಿ ಉಚಿತ ಸ್ಮಾರ್ಟ್ ಕಾರ್ಡ್

ರಾಜ್ಯದ ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ನೀಡುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ್ದ, ಐದು ಗ್ಯಾರಂಟಿಗಳ ಪೈಕಿ ಪ್ರಮುಖವಾದ ಶಕ್ತಿ ಯೋಜನೆಗೆ ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಬಸ್‌ನಲ್ಲಿ ಪ್ರಯಾಣ ಮಾಡುವಾಗ ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ.

ಶಕ್ತಿ ಯೋಜನೆಯ ಲಾಭವನ್ನು ಇನ್ನಷ್ಟು ಸರಳವಾಗಿ ಪಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವ ನಿರ್ಧಾರ ಕೈಗೊಂಡಿದೆ. ಈ ಸ್ಮಾರ್ಟ್ ಕಾರ್ಡ್‌ನ್ನು ಎರಡು ತಿಂಗಳೊಳಗೆ ರಾಜ್ಯದ ಎಲ್ಲಾ ಅರ್ಹ ಮಹಿಳೆಯರಿಗೆ ಉಚಿತವಾಗಿ ನೀಡಲಾಗುವುದು. ಈಗಾಗಲೇ ಈ ಕುರಿತ ಕಡತ ಹಣಕಾಸು ಇಲಾಖೆಗೆ ಹೋಗಿದ್ದು, ಕೇವಲ ಅನುಮತಿಯ ಬಾಕಿಯಿದೆ. ಸಾರಿಗೆ ಇಲಾಖೆ ಟೆಂಡರ್ ಕರೆಯಲು ಸಿದ್ಧತೆ ಮಾಡಿಕೊಂಡಿದೆ.

ಸ್ಮಾರ್ಟ್ ಕಾರ್ಡ್ ಪಡೆಯಲು ಮಹಿಳೆಯರು 'ಗ್ರಾಮ ಒನ್' ಅಥವಾ 'ಬೆಂಗಳೂರು ಒನ್' ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕು. ಅಲ್ಲದೆ, ಸೇವಾಸಿಂಧು ವೆಬ್‌ಸೈಟ್‌ ಬಳಸಿ ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಿದ ನಂತರ ತಕ್ಷಣವೇ ಪ್ರಿಂಟ್‌ ಮಾಡಿದ ರಸೀದಿಯೇ ಸ್ಮಾರ್ಟ್ ಕಾರ್ಡ್ ಎಂದು ಪರಿಗಣಿಸಲಾಗುತ್ತದೆ. ಮಾಸಿಕ ಪಾಸ್ ಅಥವಾ ಕಾರ್ಡ್ ವಿತರಣೆ ಇಲ್ಲ. ಇದು ಶಾಶ್ವತ ಪಾಸ್‌ನಂತೆ ಕಾರ್ಯನಿರ್ವಹಿಸುತ್ತದೆ.

ಪ್ರಿಂಟ್ ಆದ ಮಾಹಿತಿಯುಳ್ಳ ದಾಖಲೆಯೇ ಸ್ಮಾರ್ಟ್ ಕಾರ್ಡ್ ಆಗಿರಲಿದೆ. ಮಾಸಿಕ ಪಾಸಿನಂತೆ ಪ್ರತ್ಯೇಕ ಪಾಸ್ ವಿತರಣೆ ಇರಲ್ಲ. ಅರ್ಜಿ ಸಲ್ಲಿಸಿದ ಕೂಡಲೇ ನೀಡಲಾಗುವ ಪ್ರಿಂಟ್‍ಔಟ್ ಅನ್ನು ಸ್ಮಾರ್ಟ್ ಕಾರ್ಡ್ ಎಂದು ಪರಿಗಣಿಸಲಾಗುತ್ತದೆ.ಸೇವಾಸಿಂಧು ವೆಬ್‍ಸೈಟ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಆಧಾರ್ ಕಾರ್ಡ್‍ನ್ನು ದಾಖಲೆಯಾಗಿ ಪರಿಗಣಿಸಿ ರಾಜ್ಯದ ಮಹಿಳೆಯರಿಗೆ ಸ್ಮಾರ್ಟ್? ಕಾರ್ಡ್ ವಿತರಣೆ ಮಾಡಲಾಗತ್ತದೆ. ಸೇವಾಕೇಂದ್ರದಲ್ಲಿಯೇ ಸ್ಮಾರ್ಟ್‍ಕಾರ್ಡ್ ಪ್ರಿಂಟ್ ಹಾಕಲಾಗುತ್ತದೆ.

ಅಲ್ಲದೇ, ಈ ಸ್ಮಾರ್ಟ್ ಕಾರ್ಡ್‌ನ್ನು ಕೇವಲ ಕರ್ನಾಟಕದ ನಿವಾಸಿಗಳಿಗಷ್ಟೇ ನೀಡಲಾಗುತ್ತದೆ. ಆಧಾರ್ ಕಾರ್ಡ್‌ನ ವಿಳಾಸ ಕರ್ನಾಟಕದೊಳಗೇ ಇರಬೇಕಾಗಿದೆ. ಶಕ್ತಿ ಯೋಜನೆಯ ಲಾಭ ಪಡೆಯಲು ಕೆಲವರು ಆಧಾರ್ ವಿಳಾಸ ಬದಲಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಆದರೆ ವಿಳಾಸ ಬದಲಿಸಿ ಸ್ಮಾರ್ಟ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದರೆ ಅದು ಅಂಗೀಕಾರವಾಗುವುದಿಲ್ಲ.

ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

https://sevasindhu.karnataka.gov.in/Sevasindhu/Kannada?ReturnUrl=%2F

ಮೊದಲು "ಹೊಸ ಬಳಕೆದಾರರು ಇಲ್ಲಿ ನೊಂದಾಯಿಸಿ" ಮೇಲೆ ಕ್ಲಿಕ್ ಮಾಡಿ

ಮೊದಲ ಬಾರಿ ಲಾಗಿನ್ ಆಗುತ್ತಿದ್ದರೆ,New user? Register here ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,captcha type ಮಾಡಿ,Next ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ Continue ಮೇಲೆ ಕ್ಲಿಕ್ ಮಾಡಿ

ನಂತರ Allow ಮೇಲೆ ಕ್ಲಿಕ್ ಮಾಡಿ

ನಂತರ ಇಮೇಲ್ ಐಡಿ ಅಥವಾ ಮೊಬೈಲ್ ನಂಬರ್ ಹಾಕಿ, ನಿಮಗೆ ಬೇಕಾದ Password ಹಾಕಿ, captcha ಟೈಪ್ ಮಾಡಿ, submit ಮೇಲೆ ಕ್ಲಿಕ್ ಮಾಡಿ

 ನಂತರ ನಿಮ್ಮ ಸೇವಾ ಸಿಂಧು ಅಕೌಂಟ್ activate ಆಗುತ್ತದೆ. ನಂತರ login ಕ್ಲಿಕ್ ಮಾಡಿ.

ನಂತರ ನೊಂದಾಯಿತ ಬಳಕೆದಾರರು ಇಲ್ಲಿ ಲಾಗಿನ್ ಮಾಡಿ ಮೇಲೆ ಕ್ಲಿಕ್ ಮಾಡಿ 

ನಂತರ ನಿಮ್ಮ ಇಮೇಲ್ ಐಡಿ ಅಥವಾ ಮೊಬೈಲ್ ನಂಬರ್ ಹಾಕಿ, ಕ್ರಿಯೇಟ್ ಮಾಡಿದ ಪಾಸ್ವರ್ಡ್ ಹಾಕಿ ಕ್ಯಾಪ್ಚ ಟೈಪ್ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ 

ನಂತರ Apply for services ಮೇಲೆ ಕ್ಲಿಕ್ ಮಾಡಿ 

ನಂತರ view all available services ಮೇಲೆ ಕ್ಲಿಕ್ ಮಾಡಿದರೆ,758 ಸೇವೆಗಳು ದೊರೆಯುತ್ತವೆ.Search Box ನಲ್ಲಿ Shakthi bus pass ಎಂದು Type ಮಾಡಿ,ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ

ನಂತರ ಅರ್ಜಿ ನಮೂನೆ ತೆರೆಯುತ್ತದೆ ಅದರಲ್ಲಿ ಅರ್ಜಿದಾರರ  ಮೊಬೈಲ್ ಸಂಖ್ಯೆ ಹಾಗೂ ಅರ್ಜಿ ಸಲ್ಲಿಸುವವರ ವಿವರಗಳನ್ನು ಭರ್ತಿ ಮಾಡಿ.

ನಂತರ ಕೆಳಗಿನ ಭಾಗದ ಘೋಷಣೆಯಲ್ಲಿ ಐ ಅಗ್ರಿ ಎಂಬ ಚೆಕ್ ಬಾಕ್ಸ್ ಮೇಲೆ ಚೆಕ್ ಮಾಡಿ.

ನಂತರ ವೆರಿಫಿಕೇಶನ್ ಕೋಡನ್ನು ನೋಂದಣಿ ಮಾಡಿ ಅರ್ಜಿಯನ್ನು ಸಲ್ಲಿಸಿ.

]]>
Sat, 19 Apr 2025 14:53:38 +0530 shivuagrico
Crop insurance&2016 ರಿಂದ ಇಲ್ಲಿಯವರೆಗೆ ನಿಮಗೆ ಎಷ್ಟು ಬೆಳೆವಿಮೆ ಜಮಾ ಆಗಿದೆ? ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ https://krushirushi.in/crop-insurance-2035 https://krushirushi.in/crop-insurance-2035 Crop insurance-2016 ರಿಂದ ಇಲ್ಲಿಯವರೆಗೆ ನಿಮಗೆ ಎಷ್ಟು ಬೆಳೆವಿಮೆ ಜಮಾ ಆಗಿದೆ? ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ  "2016-17 ರಿಂದ 2024-25" ರವರೆಗೆ ನಿಮಗೆ ಬೇಕಾದ ವರ್ಷ ಆಯ್ಕೆ ಮಾಡಿ ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Sat, 19 Apr 2025 06:20:35 +0530 shivuagrico
Pension amount status check&ಪಿಂಚಣೆ ಹಣ 1200 ರಿಂದ 2000 ಕ್ಕೆ ಹೆಚ್ಚಳ,ಎಲ್ಲಾ ರೀತಿಯ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Pension-amount-status-check-2034 https://krushirushi.in/Pension-amount-status-check-2034 Pension amount status check-ಪಿಂಚಣೆ ಹಣ 1200 ರಿಂದ 2000 ಕ್ಕೆ ಹೆಚ್ಚಳ

ಕೇಂದ್ರ ಸರ್ಕಾರ ಇತ್ತೀಚೆಗೆ ವಿಧವಾ ಪಿಂಚಣಿ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ, ಇದು ಲಕ್ಷಾಂತರ ಮಹಿಳೆಯರಿಗೆ ಪರಿಹಾರವನ್ನು ತರುತ್ತದೆ. ಈ ಹೆಚ್ಚಳದೊಂದಿಗೆ, ಪಿಂಚಣಿ ಮೊತ್ತವನ್ನು ಗಮನಾರ್ಹವಾಗಿ ಹೆಚ್ಚಿಸಲಾಗಿದ್ದು, ಇದರಿಂದಾಗಿ ಮಹಿಳೆಯರು ಉತ್ತಮ ಆರ್ಥಿಕ ಸಹಾಯವನ್ನು ಪಡೆಯಬಹುದು.

ವಿಧವಾ ಪಿಂಚಣಿ ಯೋಜನೆಯಡಿಯಲ್ಲಿ ಪಡೆಯುವ ಮೊತ್ತವನ್ನು ಮಹತ್ತರವಾಗಿ ಹೆಚ್ಚಿಸಲಾಗಿದೆ. ಮೊದಲು ಈ ಯೋಜನೆಯಲ್ಲಿ ತಿಂಗಳಿಗೆ 500 ರಿಂದ 1000 ರೂಪಾಯಿಗಳವರೆಗೆ ಸಿಗುತ್ತಿತ್ತು ಆದರೆ ಈಗ ಅದನ್ನು ತಿಂಗಳಿಗೆ 2000 ರಿಂದ 3000 ಕ್ಕೆ ಹೆಚ್ಚಿಸಲಾಗಿದೆ. ಇದರರ್ಥ ಮಹಿಳೆಯರು ಮೊದಲಿಗಿಂತ ಹೆಚ್ಚಿನ ಆರ್ಥಿಕ ಸಹಾಯವನ್ನು ಪಡೆಯಲು ಸಾಧ್ಯವಾಗುತ್ತದೆ, ಆದರೂ ಪ್ರತಿ ರಾಜ್ಯ ಸರ್ಕಾರವನ್ನು ಅವಲಂಬಿಸಿ ಮೊತ್ತವು ಸ್ವಲ್ಪ ಬದಲಾಗಬಹುದು. ಆದರೆ ಕೇಂದ್ರ ಸರ್ಕಾರದ ಶಿಫಾರಸಿನ ನಂತರ, ಇದನ್ನು ಅನೇಕ ರಾಜ್ಯಗಳಲ್ಲಿ ಜಾರಿಗೆ ತರಲಾಗಿದ್ದು, ಇದು ಮಹಿಳೆಯರ ಜೀವನವನ್ನು ಸ್ವಲ್ಪ ಸುಲಭಗೊಳಿಸುತ್ತದೆ.

ಪ್ರಮುಖ ಬದಲಾವಣೆಗಳು

ಪಿಂಚಣಿ ಮೊತ್ತ ₹1000 ದಿಂದ ₹2000 ಕ್ಕೆ ಏರಿಕೆ.
ಈಗ ನೀವು ಪ್ರತಿ ತಿಂಗಳು ₹2000 ರಿಂದ ₹3000 ಪಡೆಯುತ್ತೀರಿ.
ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ನಿಯಮಗಳು.

ಈ ಯೋಜನೆಯ ಲಾಭವನ್ನು ಯಾರು ಪಡೆಯಬಹುದು

ಮಹಿಳೆಯ ವಯಸ್ಸು 18 ವರ್ಷಗಳು ಆಗಿರಬೇಕು.
ಮಹಿಳೆಯ ವಾರ್ಷಿಕ ಆದಾಯವು ಸರ್ಕಾರ ನಿಗದಿಪಡಿಸಿದ ಮಿತಿಗಿಂತ ಕಡಿಮೆಯಿರಬೇಕು.
ಮಹಿಳೆಗೆ ಬೇರೆ ಯಾವುದೇ ಸರ್ಕಾರಿ ಪಿಂಚಣಿ ಯೋಜನೆಯ ಲಾಭ ಸಿಗಬಾರದು
ಮಹಿಳೆಯ ಹೆಸರಿನಲ್ಲಿ ಯಾವುದೇ ದೊಡ್ಡ ಆಸ್ತಿ ಅಥವಾ ಕೃಷಿ ಭೂಮಿ ಇರಬಾರದು.
ಈ ಷರತ್ತುಗಳನ್ನು ಪೂರೈಸುವ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬಹುದು.

ಪತಿಯ ಮರಣದ ನಂತರ ಆರ್ಥಿಕವಾಗಿ ದುರ್ಬಲರಾಗಿರುವ ಮತ್ತು ಉತ್ತಮ ಜೀವನ ನಡೆಸಲು ಸಹಾಯ ಬಯಸುವ ಮಹಿಳೆಯರಿಗಾಗಿ ಈ ಯೋಜನೆ ಇದೆ.

ಅರ್ಜಿ ಸಲ್ಲಿಸುವುದು ಹೇಗೆ?

ನೀವು ಈ ಯೋಜನೆಯ ಲಾಭ ಪಡೆಯಲು ಬಯಸಿದರೆ, ಅರ್ಜಿ ಸಲ್ಲಿಸುವುದು ತುಂಬಾ ಸುಲಭ. ನೀವು ಆನ್‌ಲೈನ್ ಮತ್ತು ಆಫ್‌ಲೈನ್ ಎರಡರಲ್ಲೂ ಅರ್ಜಿ ಸಲ್ಲಿಸಬಹುದು.

ರಾಜ್ಯಗಳಾದ್ಯಂತ ಪಿಂಚಣಿ ಮೊತ್ತ

ದೇಶದ ವಿವಿಧ ರಾಜ್ಯಗಳಲ್ಲಿ ಪಿಂಚಣಿ ಮೊತ್ತವು ಬದಲಾಗಬಹುದು. ಕೆಲವು ರಾಜ್ಯಗಳ ಪಿಂಚಣಿ ಮೊತ್ತದ ಬಗ್ಗೆ ಇಲ್ಲಿದೆ ಮಾಹಿತಿ

ರಾಜ್ಯ ಹಿಂದಿನ ಮೊತ್ತ (₹) ಹೊಸ ಮೊತ್ತ (₹)
ಉತ್ತರ ಪ್ರದೇಶ 500 1500₹
ಬಿಹಾರ 600 2000₹
ರಾಜಸ್ಥಾನ 750 2500₹
ಮಧ್ಯಪ್ರದೇಶ 1000 3000₹
ಹರಿಯಾಣ 1200 2500₹
ಮಹಾರಾಷ್ಟ್ರ 800 2000₹
ಕರ್ನಾಟಕ 900 2200₹

ಎಲ್ಲಾ ರೀತಿಯ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://dssp.karnataka.gov.in/dssp/villageWise_list_Of_beneficiaries.aspx

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಅಥವಾ ಪಟ್ಟಣ select ಮಾಡಿ, ಹೊಬಳಿ,ಗ್ರಾಮ select ಮಾಡಿ,Captch type ಮಾಡಿ, Search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿ ಪಿಂಚಣಿ ಪಡೆಯುವವರ ಹೆಸರು ಸಿಗಲಿದೆ

(ಸೂಚನೆ-Desktop mode open ಮಾಡಿಕೊಳ್ಳಿ)

Pension status-ಈ ತಿಂಗಳ ನಿಮ್ಮ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://dssp.karnataka.gov.in/dssp/Beneficiary_Status.aspx

ನಂತರ ನಿಮ್ಮ ಗ್ರಾಮದ ಪಟ್ಟಿಯಲ್ಲಿ ನಿಮ್ಮ beneficiary ID ಹಾಕಿ,captcha type ಮಾಡಿ search ಮೇಲೆ ಕ್ಲಿಕ್ ಮಾಡಿ

ನಂತರ click here to get payment details from SSP portal ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ beneficiary ID ಹಾಗೂ captcha code ಹಾಕಿ search ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಇಲ್ಲಿಯವರೆಗೆ ಜಮಾ ಆದ ಪಿಂಚಣೆ ಹಣ ಮಾಹಿತಿ ದೊರೆಯಲಿದೆ

ಹೀಗೂ ಚೆಕ್ ಮಾಡಬಹುದು

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ pension ಮೇಲೆ ಕ್ಲಿಕ್ ಮಾಡಿ

ನಂತರ ಇಲ್ಲಿಯವರೆಗೂ ಜಮಾ ಆದ ಪಿಂಚಣೆ ಹಣ(pension amount)ಮಾಹಿತಿ ಸಿಗಲಿದೆ.

]]>
Fri, 18 Apr 2025 14:07:45 +0530 shivuagrico
Bele vime&ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Bele-vime-2033 https://krushirushi.in/Bele-vime-2033 Bele vime-ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Fri, 18 Apr 2025 05:36:35 +0530 shivuagrico
Todays gold rate&1 ಲಕ್ಷದ ಗಡಿಯತ್ತ ಬಂಗಾರದ ಬೆಲೆ https://krushirushi.in/Todays-gold-rate-2032 https://krushirushi.in/Todays-gold-rate-2032 Todays gold rate-1 ಲಕ್ಷದ ಗಡಿಯತ್ತ ಬಂಗಾರದ ಬೆಲೆ


ಚಿನ್ನದ ಬೆಲೆ ಇವತ್ತೂ ಭಾರೀ ಪ್ರಮಾಣದಲ್ಲಿ ಏರಿಕೆ ಆಗಿದೆ. ನಿನ್ನೆ ಗ್ರಾಮ್​​ಗೆ 95 ರೂನಷ್ಟು ಏರಿದ್ದ
ಚಿನ್ನದ ಬೆಲೆ (Gold rate today) ಇವತ್ತು ಗುರುವಾರ ಬರೋಬ್ಬರಿ 105 ರೂಗಳಷ್ಟು ಹೆಚ್ಚಳ ಕಂಡಿದೆ. ಎರಡು ದಿನದಲ್ಲಿ 200 ರೂನಷ್ಟು ಬೆಲೆ ಜಂಪ್ ಆಗಿದೆ. ಭಾರತ ಹಾಗೂ ಬಹುತೇಕ ಎಲ್ಲಾ ದೇಶಗಳಲ್ಲೂ ಸ್ವರ್ಣ ಬೆಲೆ ಸಿಕ್ಕಾಪಟ್ಟೆ ಏರಿದೆ. ಅಮೆರಿಕದಲ್ಲಿ ಒಂದು ಗ್ರಾಮ್ ಚಿನ್ನದ ಬೆಲೆ ಮೊದಲ ಬಾರಿಗೆ 100 ಡಾಲರ್ ಗಡಿ ದಾಟಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಏರಿಕೆ ಕಂಡಿಲ್ಲ. ಒಂದು ಗ್ರಾಮ್ ಬೆಳ್ಳಿ 100 ರೂ ಮತ್ತು 110 ರೂನಲ್ಲಿ ಬೆಲೆ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,310 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,990 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,310 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,200 ರೂ
  • ಚೆನ್ನೈ: 89,200 ರೂ
  • ಮುಂಬೈ: 89,200 ರೂ
  • ದೆಹಲಿ: 89,350 ರೂ
  • ಕೋಲ್ಕತಾ: 89,200 ರೂ
  • ಕೇರಳ: 89,200 ರೂ
  • ಅಹ್ಮದಾಬಾದ್: 89,250 ರೂ
  • ಜೈಪುರ್: 89,350 ರೂ
  • ಲಕ್ನೋ: 89,350 ರೂ
  • ಭುವನೇಶ್ವರ್: 89,200 ರೂ
  • ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

    • ಬೆಂಗಳೂರು: 10,000 ರೂ
    • ಚೆನ್ನೈ: 11,000 ರೂ
    • ಮುಂಬೈ: 10,000 ರೂ
    • ದೆಹಲಿ: 10,000 ರೂ
    • ಕೋಲ್ಕತಾ: 10,000 ರೂ
    • ಕೇರಳ: 11,000 ರೂ
    • ಅಹ್ಮದಾಬಾದ್: 10,000 ರೂ
    • ಜೈಪುರ್: 10,000 ರೂ
    • ಲಕ್ನೋ: 10,000 ರೂ
    • ಭುವನೇಶ್ವರ್: 11,000 ರೂ
    • ಪುಣೆ: 10,000

    (ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

]]>
Thu, 17 Apr 2025 20:57:39 +0530 shivuagrico
Mansoon rain&ಆಲಿಕಲ್ಲು ಮಳೆ ಸಹಿತ ಏಪ್ರೀಲ್ 23 ರವರೆಗೆ ಜಿಲ್ಲಾವಾರು ಮಳೆ ಮಾಹಿತಿ https://krushirushi.in/Mansoon-rain-2031 https://krushirushi.in/Mansoon-rain-2031 Mansoon rain-ಏಪ್ರೀಲ್ 23 ರವರೆಗೆ ಜಿಲ್ಲಾವಾರು ಮಳೆ ಮಾಹಿತಿ


ದಿನ 1 (ಏಪ್ರಿಲ್ 17, 2025):

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಣ ಹವಾಮಾನವಿರುತ್ತದೆ.
ಯಾದಗಿರಿ, ಬೀದರ್, ಕಲಬುರ್ಗಿ, ಗದಗ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 50-60 ಕಿ.ಮೀ.) ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ.
ಕೊಡಗು, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ , ಚಿಕ್ಕಮಗಳೂರು, ಚಾಮರಾಜನಗರ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ನಾಳೆಯ ಹವಾಮಾನ

ದಕ್ಷಿಣ ಕನ್ನಡ ಜಿಲ್ಲೆ, ಯಾದಗಿರಿ, ಬೀದರ್, ಕಲಬುರ್ಗಿ, ಗದಗ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ, ಕೊಡಗು, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಚಾಮರಾಜನಗರ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ (ಗಂಟೆಗೆ 40-50 ಕಿ.ಮೀ) ಮಳೆಯಾಗುವ ಸಾಧ್ಯತೆ ಇದೆ.


3ನೇ ದಿನ (ಏಪ್ರಿಲ್ 19, 2025):

*ಕರಾವಳಿ ಕರ್ನಾಟಕದಲ್ಲಿ ಮುಖ್ಯವಾಗಿ ಒಣ ಹವಾಮಾನ ಇರುವ ಸಾಧ್ಯತೆ ಹೆಚ್ಚು . ಯಾದಗಿರಿ, ಬೀದರ್, ಕಲಬುರ್ಗಿ, ಗದಗ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ, ಕೊಡಗು, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಚಾಮರಾಜನಗರ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.


4ನೇ ದಿನ (ಏಪ್ರಿಲ್ 20, 2025):

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ (40-50 ಕಿ.ಮೀ) ವೇಗದಲ್ಲಿ ಗಾಳಿಯೊಂದಿಗೆ ಹಗುರ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.


*5ನೇ ದಿನ (ಏಪ್ರಿಲ್ 21, 2025) *:

ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಏಪ್ರಿಲ್ 22, 2025 ರಂದು ಕರಾವಳಿ ಕರ್ನಾಟಕ ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.


ಏಪ್ರಿಲ್ 23, 2025 ರಂದು:

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ.

18.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸೆಖೆ ಸ್ವಲ್ಪ ಜಾಸ್ತಿಯೇ ಇರಲಿದೆ. 
ಈಗಿನಂತೆ ಎಪ್ರಿಲ್ 20ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೊಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ  ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಎಪ್ರಿಲ್ 19 ಅಥವಾ 20 ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಒಳನಾಡಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 
ಈಗಿನಂತೆ ಎಪ್ರಿಲ್ 20ರಿಂದ ದಕ್ಷಿಣ ಒಳನಾಡು ಹಾಗೂ 21 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. 

2025ನೇ ಸಾಲಿನ ಭಾರತೀಯ ಹವಾಮಾನ ಇಲಾಖೆಯ ಮುಂಗಾರು ಪ್ರಥಮ ಸುತ್ತಿನ ( ಜೂನ್ - ಸೆಪ್ಟೆಂಬರ್ ) ವರದಿ ಪ್ರಕಟಿಸಲಾಗಿದ್ದು, ರಾಜ್ಯದಲ್ಲಿ ಸಾಮಾನ್ಯ ಮುಂಗಾರು ಇರುವ ಸಾಧ್ಯತೆಗಳನ್ನು ಹೇಳುತ್ತಿದೆ.

]]>
Thu, 17 Apr 2025 18:04:03 +0530 shivuagrico
Gruhalakshmi list&ಈ ಪಟ್ಟಿಯಲ್ಲಿರುವವರಿಗೆ ಜಮಾ ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ https://krushirushi.in/Gruhalakshmi-list-2030 https://krushirushi.in/Gruhalakshmi-list-2030 Gruhalakshmi list-ಈ ಪಟ್ಟಿಯಲ್ಲಿರುವವರಿಗೆ ಜಮಾ ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ

 ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ 5ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ಈಗಾಗಲೇ ರಾಜ್ಯದ ಮಹಿಳಾ ಮಣಿಯರ ಖಾತೆಗೆ ಸರ್ಕಾರ ಪ್ರತಿ ತಿಂಗಳು ಬಂದ 2000 ರೂ. ಹಣವನ್ನು ಜಮಾ ಮಾಡುತ್ತಿದೆ. ಈ ಗೃಹ ಲಕ್ಷ್ಮಿ ಹಣವನ್ನ ಕೂಡಿಟ್ಟು ಅನೇಕ ಮಹಿಳೆಯರು ಸದುಪಯೋಗ ಪಡಿಸಿಕೊಂಡಂತಹ ನಿರ್ದರ್ಶನಗಳು ನೋಡಿದ್ದೇವೆ.
ಇದೀಗ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಎಂದು ಯಜಮಾನಿಯರ ಆರೋಪವಾಗಿತ್ತು.

ಈ ಕುರಿತಾಗಿ ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಅಪ್ಡೇಟ್ ನೀಡಿದ್ದು,ಫೆಬ್ರವರಿ ತಿಂಗಳ ಬಳ ಏಪ್ರಿಲ್‌ ಎರಡನೇ ವಾರದಂದು ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಹೇಳಿದ್ರು. ಇದೀಗ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಹಣ ಆದಷ್ಟು ಶೀಘ್ರದಲ್ಲಿ ಮಹಿಳೆಯವರ ಖಾತೆಗೆ ಜಮಾ ಆಗಲಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಜನವರಿ ತಿಂಗಳ ಗೃಹಲಕ್ಷ್ಮಿ ಹಣವನ್ನು ಕಳೆದ ಯುಗಾದಿ ಹಬ್ಬದ ಸಂದರ್ಭದಲ್ಲಿ ಮಹಿಳೆಯರ ಖಾತೆಗೆ ಜಮೆ ಮಾಡಲಾಗಿತ್ತು.ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಹಣ ಯಾವಾಗ ಜಮಾ ಆಗಲಿದೆ ಎಂದು ಮಹಿಳೆಯರು ಸರ್ಕಾರವನ್ನ ಪ್ರಶ್ನಿಸುತ್ತಿದ್ದಾರೆ. ಹಾಗಾಗಿ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಹಣ ಆದಷ್ಟು ಶೀಘ್ರದಲ್ಲಿ ಮಹಿಳೆಯವರ ಖಾತೆಗೆ ಗೃಹಲಕ್ಷ್ಮಿ ಹಣ ಜಮೆ ಆಗಲಿದೆ ಎಂದು ತಿಳಿದು ಬಂದಿದೆ.

Gruhalakshmi list-ಈ ಪಟ್ಟಿಯಲ್ಲಿರುವವರಿಗೆ ಜಮಾ ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ

ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಈಗಾಗಲೇ ಘಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣ ಕೂಡ ಬಿಡುಗಡೆಯಾಗಿದ್ದು, ಶೀಘ್ರವೇ ಜಮೆಯಾಗಲಿದೆ.” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ.

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Thu, 17 Apr 2025 05:51:25 +0530 shivuagrico
Bele parihara&ಅಕಾಲಿಕ ಆಲಿಕಲ್ಲು ಮಳೆಯಿಂದ 12,726 ಹೆಕ್ಟೇರ್ ಬೆಳೆಹಾನಿ https://krushirushi.in/Bele-parihara-2029 https://krushirushi.in/Bele-parihara-2029 Crop loss compensation-ಅಕಾಲಿಕ ಆಲಿಕಲ್ಲು ಮಳೆಯಿಂದ 12,726 ಹೆಕ್ಟೇರ್ ಬೆಳೆ ಹಾನಿ,ಇಲ್ಲಿಯವರೆಗೂ ಜಮಾ ಆದ ಬೆಳೆ ಪರಿಹಾರ ಚೆಕ್ ಮಾಡಿ


ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ 12,726 
ಹೆಕ್ಟರ್ ಬೆಳೆ ನಾಶ ಆಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ಬಹಳ ಕಡೆ ನಷ್ಟವಾಗಿದ್ದು, 12,726 ಹೆಕ್ಟರ್ ಬೆಳೆ ನಾಶ ಆಗಿದೆ. ಎನ್‌ಡಿಆರ್‌ಎಫ್‌ ಮೂಲಕ ಹಣ ನೀಡಿದರೆ ರೈತರಿಗೆ ಜಮಾ ಮಾಡಲಾಗುವುದು.

Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Wed, 16 Apr 2025 19:41:30 +0530 shivuagrico
Crop insurance news&ಮಳೆಯಿಂದ ಬೆಳೆ ಹಾನಿಯಾಗಿ 72 ಗಂಟೆಯೊಳಗೆ ಈ ಕೆಲಸ ಮಾಡಿದವರಿಗೆ ಮಾತ್ರ ಜಮಾ ಆಗಲಿದೆ ಬೆಳೆವಿಮೆ https://krushirushi.in/Crop-insurance-news-2028 https://krushirushi.in/Crop-insurance-news-2028 Crop insurance news-ಮಳೆಯಿಂದ ಬೆಳೆ ಹಾನಿಯಾಗಿ 72 ಗಂಟೆಯೊಳಗೆ ಈ ಕೆಲಸ ಮಾಡಿದವರಿಗೆ ಮಾತ್ರ ಜಮಾ ಆಗಲಿದೆ ಬೆಳೆವಿಮೆ
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಉದ್ದೇಶಬೆಳೆ ವೈಫಲ್ಯದ ಆರ್ಥಿಕ ನಷ್ಟವನ್ನು ಕಡಿಮೆ ಮಾಡುವ ಮೂಲಕ, ಇದು ರೈತರ ಆದಾಯವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ. ಮತ್ತು ರೈತರು ಸ್ಥಿರವಾದ ಆದಾಯವನ್ನು ಹೊಂದಿರುವಾಗ, ಅವರು ಉತ್ತಮ ಕೃಷಿ ಪದ್ಧತಿಗಳಲ್ಲಿ ಹೂಡಿಕೆ ಮಾಡಬಹುದು, ಇದು ಹಲವಾರು ಪ್ರಯೋಜನಗಳನ್ನು ತರುತ್ತದೆ. ಬೆಳೆ ಹಾನಿ/ನಷ್ಟದ ವಿರುದ್ಧ ರೈತರಿಗೆ ಆರ್ಥಿಕ ನೆರವು ನೀಡುವುದು.
ಸ್ಧಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ (Localized calamity) ಆಲೀಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ(ಇನಂಡೇಷನ್), ಮೇಘಸ್ಪೋಟ (Cloud burst) ಮತ್ತು ಗುಡುಗು ಮಿಂಚುಗಳಿಂದಾಗಿ ಉಂಟಾಗುವ ಬೆಂಕಿ ಅವಘಡ (Natural fire due to lightning) ಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯುಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಯೋಜನೆಯಡಿ ಅವಕಾಶವಿರುತ್ತದೆ.
ಒಂದು ವೇಳೆ ಒಂದು ಅಧಿಸೂಚಿತ ಘಟಕದಲ್ಲಿ ಶೇಕಡಾ 25 ಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ಬೆಳೆ ನಷ್ಟವಾದರೆ ಅಧಿಸೂಚಿತ ಘಟಕದಲ್ಲಿ ಬೆಳೆ ವಿಮೆಗೆ ಒಳಪಟ್ಟ ರೈತರಲ್ಲಿಬೆಳೆ ನಷ್ಟವಾದ ರೈತರಿಗೆ ಮಾತ್ರ ಮಾದರಿ ಸಮೀಕ್ಷೆಗನುಗುಣವಾಗಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು.
ಇಂತಹ ಸ್ಧಳೀಯ ಗಂಡಾಂತರಗಳ ಕಾರಣದಿಂದ ಬೆಳೆ ನಷ್ಟಸಂಭವಿಸಿದರೆ, ಬೆಳೆ ವಿಮೆ ಮಾಡಿಸಿರುವ ರೈತರು ಬಗ್ಗೆನೇರವಾಗಿ ಸಂಬಂಧಪಟ್ಟ ಅನುಷ್ಠಾನಗೊಳಿಸುವ ವಿಮಾಸಂಸ್ಥೆಗಳ ಕಛೇರಿಗಳಿಗೆ ಅಥವಾ ಹಣಕಾಸು ಸಂಸ್ಧೆ ಅಥವಾ ಕೃಷಿ/ತೋಟಗಾರಿಕೆ ಇಲಾಖೆ ಮೂಲಕ ತಕ್ಷಣಸೂಚನೆ ನೀಡಬೇಕು.
ಇಂತಹ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆಕಾರಣಗಳನ್ನು 72 ಗಂಟೆಗಳೊಳಗಾಗಿ ತಿಳಿಸಬೇಕು.
ನಷ್ಟದ ಬಗೆಗಿನ ಮಾಹಿತಿಯನ್ನು ಸ್ವೀಕರಿಸಿದ ಮೇಲೆ ವಿಮಾಸಂಸ್ಥೆಗಳು ಬೆಳೆ ನಷ್ಟವನ್ನು ನಿರ್ಧರಿಸುವುದಕ್ಕೆ ನಷ್ಟನಿರ್ಧಾರಕರನ್ನು ಸಂಬಂಧಪಟ್ಟ ಪ್ರದೇಶಕ್ಕೆ 48 ಗಂಟೆಯೊಳಗಾಗಿ ನಿಯೋಜಿಸುವುದು.
ವಿಮೆ ಸಂಸ್ಥೆಯಿಂದ ನೇಮಿಸಲ್ಪಟ್ಟ ನಷ್ಟ ನಿರ್ಧಾರಕರುಮತ್ತು ಸ್ಥಳೀಯ ತಾಲ್ಲೂಕು/ಹೋಬಳಿ ಮಟ್ಟದ ಕೃಷಿ ಮತ್ತುತೋಟಗಾರಿಕಾ ಇಲಾಖಾ ಅಧಿಕಾರಿಗಳು ಜಂಟಿಯಾಗಿ, ಹಾನಿಗೊಳಗಾದ ರೈತರ ಸಮ್ಮುಖದಲ್ಲಿ ಬೆಳೆ ನಷ್ಟನಿರ್ಧರಿಸಲಾಗುವುದು.
ಸದರಿ ಬೆಳೆ ನಷ್ಟದ ವರದಿಯನ್ನು ಜಿಲ್ಲೆಗಳ ಇಲಾಖಾಮುಖ್ಯಸ್ಥರು ಅನುಷ್ಟಾನ ವಿಮಾ ಸಂಸ್ಥೆಗಳಿಗೆ ನೇರವಾಗಿಸಲ್ಲಿಸಲು ಕ್ರಮ ಕೈಗೊಳ್ಳುವುದು.
1. Post Harvest Losses
ಯೋಜನೆಯಡಿ ಬೆಳೆ ಕಟಾವಿನ ನಂತರ ಬೆಳೆಯನ್ನುಜಮೀನಿನಲ್ಲೆ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ (Post Harvest Losses) ಕಟಾವು ಮಾಡಿದ ಎರಡುವಾರಗಳೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕಮಳೆಯಿಂದಾಗಿ ಬೆಳೆ ನಾಶವಾದರೆ ವೈಯುಕ್ತಿಕವಾಗಿ(Case to Case basis) ವಿಮಾ ಸಂಸ್ಧೆಯು ನಷ್ಟ ನಿರ್ಧಾರ ಮಾಡಿಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಒಳಪಡಿಸಲಾಗಿದೆ.
ಬೆಳೆ ವಿಮೆ ಮಾಡಿಸಿದ ರೈತರು ಯಾರಿಗೆ ಸಂಪರ್ಕಿಸಬೇಕು?

ಬೆಳೆ ವಿಮೆ ಮಾಡಿಸಿದ ರೈತರು ಯಾವ ವಿಮಾ ಕಂಪನಿಗೆ ಹಣ ಪಾವತಿಸಿದ್ದಾರೋ ಆ ವಿಮಾ ಕಂಪನಿಗೆ ಸಂಪರ್ಕಿಸಬೇಕು. ಒಂದು ವೇಳೆ ವಿಮಾ ಕಂಪನಿಯ ನಂಬರ್‌ ಗೊತ್ತಿಲ್ಲದಿದ್ದರೆ ಬೆಳೆ ವಿಮೆ ಉಚಿತ ಸಹಾಯವಾಣಿ 1800 180 1551 ನಂಬರಿಗೆ ಕರೆ ಮಾಡಿ ನಿಮ್ಮ ಜಿಲ್ಲೆ ವಿಮಾ ಕಂಪನಿಯ ನಂಬ‌ರ್ ಪಡೆದು ಕರೆ ಮಾಡಬೇಕು.

ಬೆಳೆ ವಿಮೆ ಹಣ ಎಷ್ಟು ಜಮೆಯಾಗುತ್ತದೆ?

ಬೆಳೆ ವಿಮೆ ಮಾಡಿಸಿದ ನಂತರ ಬೆಳೆ ಎಷ್ಟು ಪ್ರಮಾಣದಲ್ಲಿ ಹಾಳಾಗಿದೆ ಹಾಗೂ ಬೆಳೆ ಯಾವ ಹಂತದಲ್ಲಿ ಹಾಳಾಗಿದೆ ಎಂಬುದನ್ನು ನಿರ್ಧರಿಸಿ ರೈತರಿಗೆ ವಿಮೆ ಹಣ ಪಾವತಿಸಲಾಗುವುದು.
]]>
Wed, 16 Apr 2025 05:51:43 +0530 shivuagrico
ಈ ಬಾರಿ El Nino ಅಸಂಭವ, ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು Monsoon ಮಳೆ ಸಾಧ್ಯತೆ: IMD https://krushirushi.in/IMD-2027 https://krushirushi.in/IMD-2027 ಈ ಬಾರಿ ಭಾರತದಲ್ಲಿ ಇಡೀ ಋತುವಿನಲ್ಲಿ ಎಲ್ ನಿನೊ ಪರಿಸ್ಥಿತಿಯ ಸಾಧ್ಯತೆ ಇಲ್ಲ ಎಂದು ಹೇಳಿರುವ ಭಾರತೀಯ ಹವಾಮಾನ ಇಲಾಖೆ, ಈ ಮಾನ್ಸೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

"ಭಾರತವು ನಾಲ್ಕು ತಿಂಗಳ ಮಾನ್ಸೂನ್ ಋತುವಿನಲ್ಲಿ (ಜೂನ್ ನಿಂದ ಸೆಪ್ಟೆಂಬರ್) ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿಯ ಸರಾಸರಿ 87 ಸೆಂ.ಮೀ.ನಷ್ಟು ಸಂಚಿತ ಮಳೆಯಾಗುವ ಅಂದಾಜು ಮಾಡಲಾಗಿದೆ" ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಾನ್ಸೂನ್ ಮಳೆಗೆ ಸಂಬಂಧಿಸಿದ ಎಲ್ ನಿನೊ ಪರಿಸ್ಥಿತಿಗಳು ಈ ಬಾರಿ ಅಭಿವೃದ್ಧಿ ಹೊಂದುವ ಸಾಧ್ಯತೆ ಇಲ್ಲ. ದೇಶದ ಕೆಲವು ಭಾಗಗಳು ಈಗಾಗಲೇ ತೀವ್ರ ಶಾಖವನ್ನು ಎದುರಿಸುತ್ತಿವೆ ಮತ್ತು ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ ಗಮನಾರ್ಹವಾಗಿ ಹೆಚ್ಚಿನ ಸಂಖ್ಯೆಯ ಉಷ್ಣ ಅಲೆ ದಿನಗಳನ್ನು ನಿರೀಕ್ಷಿಸಲಾಗಿದೆ. ಇದು ವಿದ್ಯುತ್ ಗ್ರಿಡ್‌ಗಳನ್ನು ಒತ್ತಡಕ್ಕೆ ಒಳಪಡಿಸಬಹುದು ಮತ್ತು ನೀರಿನ ಕೊರತೆಗೆ ಕಾರಣವಾಗಬಹುದು ಎಂದು ಅವರು ಹೇಳಿದರು.

ಭಾರತದ ಕೃಷಿ ವಲಯಕ್ಕೆ ಮಾನ್ಸೂನ್ ನಿರ್ಣಾಯಕವಾಗಿದ್ದು, ಇದು ಸುಮಾರು ಶೇ. 42.3 ರಷ್ಟು ಜನಸಂಖ್ಯೆಯ ಜೀವನೋಪಾಯವನ್ನು ಬೆಂಬಲಿಸುತ್ತದೆ ಮತ್ತು ದೇಶದ ಜಿಡಿಪಿಗೆ ಶೇ. 18.2 ರಷ್ಟು ಕೊಡುಗೆ ನೀಡುತ್ತದೆ. ನಿವ್ವಳ ಸಾಗುವಳಿ ಪ್ರದೇಶದ ಶೇ.52ರಷ್ಟು ಭಾಗವು ಪ್ರಾಥಮಿಕ ಮಳೆ ವ್ಯವಸ್ಥೆಯನ್ನು ಅವಲಂಬಿಸಿದೆ.

ದೇಶಾದ್ಯಂತ ವಿದ್ಯುತ್ ಉತ್ಪಾದನೆಯ ಜೊತೆಗೆ ಕುಡಿಯುವ ನೀರಿಗೆ ನಿರ್ಣಾಯಕವಾಗಿರುವ ಜಲಾಶಯಗಳ ಮರುಪೂರಣಕ್ಕೂ ಇದು ನಿರ್ಣಾಯಕವಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ.

ಆದ್ದರಿಂದ, ಮಾನ್ಸೂನ್ ಋತುವಿನಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆಯು ರಾಷ್ಟ್ರಕ್ಕೆ ದೊಡ್ಡ ಪರಿಹಾರವಾಗಿದೆ. ಸಾಮಾನ್ಯ ಸಂಚಿತ ಮಳೆಯು ದೇಶಾದ್ಯಂತ ಮಳೆಯ ಏಕರೂಪದ ತಾತ್ಕಾಲಿಕ ಮತ್ತು ಪ್ರಾದೇಶಿಕ ವಿತರಣೆಯನ್ನು ಖಾತರಿಪಡಿಸುವುದಿಲ್ಲ, ಹವಾಮಾನ ಬದಲಾವಣೆಯು ಮಳೆ ನೀಡುವ ವ್ಯವಸ್ಥೆಯ ವ್ಯತ್ಯಾಸವನ್ನು ಮತ್ತಷ್ಟು ಹೆಚ್ಚಿಸುತ್ತದೆ.

ಹವಾಮಾನ ವಿಜ್ಞಾನಿಗಳು ಹೇಳುವಂತೆ ಮಳೆಗಾಲದ ದಿನಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಭಾರೀ ಮಳೆಯ ಘಟನೆಗಳು (ಅಲ್ಪಾವಧಿಯಲ್ಲಿ ಹೆಚ್ಚಿನ ಮಳೆ) ಹೆಚ್ಚುತ್ತಿವೆ, ಇದು ಆಗಾಗ್ಗೆ ಬರ ಮತ್ತು ಪ್ರವಾಹಗಳಿಗೆ ಕಾರಣವಾಗುತ್ತದೆ ಎಂದು ಹೇಳಿದೆ.

]]>
Tue, 15 Apr 2025 19:09:58 +0530 shivuagrico
Vasathi yojane&ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ 1 ಲಕ್ಷ ರೂಪಾಯಿ ನೆರವು, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ https://krushirushi.in/Vasathi-yojane-2026 https://krushirushi.in/Vasathi-yojane-2026 Vasathi yojane-ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ 1 ಲಕ್ಷ ರೂಪಾಯಿ ನೆರವು, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

ರಾಜ್ಯ ಸರ್ಕಾರ ವಸತಿ ರಹಿತರಿಗೆ ಗುಡ್ ನ್ಯೂಸ್ ನೀಡಿದ್ದು, ಈ ವರ್ಷ 2.30 ಲಕ್ಷ ಮನೆಗಳ ನಿರ್ಮಾಣ ಮಾಡುವುದಾಗಿ ಘೋಷಿಸಿದೆ.

ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 1.80 ಲಕ್ಷ ಮನೆಗಳು ಮಂಜೂರಾಗಿದ್ದು, ಮೊದಲ ಹಂತದಲ್ಲಿ 36,789, ಎರಡನೇ ಹಂತದಲ್ಲಿ 39,843 ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗಿದೆ.

ಉಳಿದ 1.30 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ 46 ಸಾವಿರ ಮನೆ ಸೇರಿ ಈ ವರ್ಷ 2.30 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವರಾದ ಜಮೀರ್ ಅಹಮದ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

 ಯೋಜನೆಯ ಹೆಸರು- ಪ್ರಧಾನ ಮಂತ್ರಿ ಆವಾಸ್ ( ಗ್ರಾಮೀಣ ಪ್ರದೇಶಗಳಲ್ಲಿ  ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ವಸತಿ ಕಲ್ಪಿಸುವ ಯೋಜನೆ)

 ಸಹಾಯಧನದ ಮೊತ್ತ

 ಎಸ್ ಸಿ ಎಸ್ ಟಿ
 ಕೇಂದ್ರದ ಪಾಲು -72,000
 ರಾಜ್ಯದ ಪಾಲು-78,000
 ಒಟ್ಟು -1,50,000

 ಸಾಮಾನ್ಯ ವರ್ಗದವರಿಗೆ
 ಕೇಂದ್ರದ ಪಾಲು-72,000
 ರಾಜ್ಯದ ಪಾಲು-48,000
 ಒಟ್ಟು -1,20,000

 ಫಲಾನುಭವಿಯ ಸ್ವಸಹಾಯವಂತಿಕೆ

ಎಲ್ಲಾ ವರ್ಗದ ಫಲಾನುಭವಿಗಳಿಗೆ ಕನಿಷ್ಠ ಒಂದು ಲಕ್ಷ
 ಈ ಯೋಜನೆ ಅಡಿಯಲ್ಲಿ ಒದಗಿಸಲಾಗುವ ಆರ್ಥಿಕ ಸಹಾಯದ ಜೊತೆಗೆ ಫಲಾನುಭವಿಯು ಕನಿಷ್ಠ 30,000 ಗಳನ್ನು ಅಥವಾ ತನ್ನ ಸಾಮರ್ಥ್ಯ ಹಾಗೂ ವಸತಿಯ ಅವಶ್ಯಕತೆಗೆ ಅನುಸಾರವಾಗಿ ಸಾಧ್ಯವಾದಷ್ಟು ಸ್ವಂತ ಉಳಿತಾಯ ಹೂಡಿಕೆ ಮಾಡಿ ಹೆಚ್ಚಿನ ಹಾಗೂ ಉತ್ತಮ ಸೌಲಭ್ಯಗಳನ್ನು ಹೊಂದಬಹುದು

 ಡಿ ಆರ್ ಐ ಯಡಿ ಸಾಲ ಮತ್ತು ಬಡ್ಡಿಯ ದರ

 ಈ ಯೋಜನೆಯಡಿ ಸ್ಥಳೀಯ ಬ್ಯಾಂಕಿನಿಂದ 20000 ವರೆಗೆ ನಾಲ್ಕು ಪರ್ಸೆಂಟ್ ವಾರ್ಷಿಕ ಬಡ್ಡಿ ದರದಲ್ಲಿ ಸಾಲವನ್ನು ಆಯ್ಕೆಯಾದ ಫಲಾನುಭವಿಗಳು ಪಡೆದುಕೊಳ್ಳಲು ಅವಕಾಶವಿರುತ್ತದೆ

 ಫಲಾನುಭವಿಯ ಆಯ್ಕೆ

 ಕೇಂದ್ರ ಸರ್ಕಾರದಿಂದ ನೀಡಲಾದ ಫಲಾನುಭವಿಗಳ ಪಟ್ಟಿಯಿಂದ ನಿಯಮಾನುಸಾರ ಗ್ರಾಮ ಸಭೆಯಲ್ಲಿ ಆಯ್ಕೆ ಮಾಡಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಪಟ್ಟಿಗೆ ಅನುಮೋದನೆ ಪಡೆಯಲಾಗುವುದು. ನಂತರ ಸಂಬಂಧಪಟ್ಟ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಯ ಅನುಮೋದನೆಯೊಂದಿಗೆ ನಿಗಮದ ಅನುಮೋದನೆ ನೀಡಲಾಗುವುದು.

 ಯೋಜನೆಯ ಅನುಷ್ಠಾನ

 ಪ್ರತಿ ವರ್ಷ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಗುರಿಗನುಗುಣವಾಗಿ ಗುರಿ ನಿಗದಿಪಡಿಸಲಾಗುವುದು
 ಮೀಸಲಾತಿ-SC ST ಶೇಕಡ 60%
 ಅಲ್ಪಸಂಖ್ಯಾತ ಶೇಕಡ 15%
 ಸಾಮಾನ್ಯ ಶೇಕಡಾ 25%


  
 ಜಿಪಿಎಸ್ ತಂತ್ರಜ್ಞಾನ ಅಳವಡಿಕೆ

 2011 12 ನೇ ಸಾಲಿನಿಂದ ಜಿಪಿಎಸ್ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತಿದೆ
 ಅವ್ಯವಹಾರವನ್ನು ತಡೆಗಟ್ಟಲು ಹಾಗೂ ಸರ್ಕಾರದ ಹಣ ದುರುಪಯೋಗವಾಗದಂತೆ ನೋಡಿಕೊಂಡು ಫಲಾನುಭವಿಗಳಿಗೆ ವಸತಿ ಸೌಕರ್ಯವನ್ನು ಪಾರದರ್ಶಕತೆಯ ಮೂಲಕ ನೀಡಲು ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ಈ ತಂತ್ರಜ್ಞಾನದ ಉಪಯೋಗಗಳು ಇಂತಿವೆ

 ಪ್ರತಿ ಮನೆಯ ಪ್ರಗತಿ ಹಂತದ ಛಾಯಾಚಿತ್ರವನ್ನು ಜಿಪಿಎಸ್ ಕ್ಯಾಮೆರಾ ಮೂಲಕ ಸೆರೆ ಹಿಡಿಯುವುದು
 ಒಮ್ಮೆ ವಸತಿ ಸೌಕರ್ಯ ಪಡೆದ ಫಲಾನುಭವಿಗಳ ಪುನರಾವರ್ತನೆಗೆ ತಡೆ
 ಛಾಯಾಚಿತ್ರದ ಆಧಾರದ ಮೇಲೆ ಅನುದಾನ ಬಿಡುಗಡೆ
 ಮಾಹಿತಿಗಾಗಿ ಎಲ್ಲಾ ಮನೆಗಳ ಛಾಯಾಚಿತ್ರಗಳು ನಿಗಮದ ವೆಬ್ ಸೈಟ್ ನಲ್ಲಿ ಲಭ್ಯ
 ಹಣದ ದುರ್ಬಳಕೆಗೆ ತಡೆ

 ಅರ್ಹತೆ ಮತ್ತು ಷರತ್ತುಗಳು
 ಸಂಬಂಧಪಟ್ಟ ಗ್ರಾಮ ಪಂಚಾಯತ್ ವಾಸಿ ಆಗಿರಬೇಕು
 ಮನೆ ನಿವೇಶನ ಹಕ್ಕು ಪತ್ರವನ್ನು ಹೆಂಡತಿ ಹೆಸರಿನಲ್ಲಿ ವಿತರಿಸಬೇಕು
 ಬೇರೆ ಯಾವುದೇ ಯೋಜನೆ ಅಥವಾ ಇಲಾಖೆಯಿಂದ ಈಗಾಗಲೇ ವಸತಿ ಸೌಲಭ್ಯ ಪಡೆದಿರಬಾರದು
 ಮನೆಗಳ ವಿಸ್ತೀರ್ಣ ಮತ್ತು ವಿನ್ಯಾಸ : ಕನಿಷ್ಠ 25 ಚದರ ಮೀಟರ್ ನೆಲಗಟ್ಟು ವಿಸ್ತೀರ್ಣ ಇರುವಂತೆ ಮನೆ ನಿರ್ಮಿಸಬೇಕು. ಇದಕ್ಕಾಗಿ ಯಾವುದೇ ನಕ್ಷೆ ಅಥವಾ ವಿನ್ಯಾಸ ನಿಗದಿಪಡಿಸಿರುವುದಿಲ್ಲ. ಆದರೆ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಮಣ್ಣು ಹವಾ ಗುಣ ಪರಿಸ್ಥಿತಿ ಸ್ಥಳೀಯವಾಗಿ ಲಭ್ಯವಿರುವ ಸಾಮಗ್ರಿಗಳ ಬಳಕೆ ಇತ್ಯಾದಿ ಅಂಶಗಳನ್ನು ಪರಿಗಣಿಸಿ ಪ್ರದೇಶವಾರು ಮತ್ತು ಬದಲಿ ವಿನ್ಯಾಸಗಳನ್ನು ಅನುಸರಿಸಬಹುದು ಮನೆ ನಿರ್ಮಾಣದ ಪ್ರತಿ ಹಂತದಲ್ಲಿಯೂ ಫಲಾನುಭವಿ ಸಕ್ರಿಯವಾಗಿ ಪಾಲ್ಗೊಂಡು ಒಳ್ಳೆಯ ಗುಣಮಟ್ಟದ ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಹೊಂದಬಹುದು.
 ಒಟ್ಟಾರೆ ಆಗಿದ್ದಾಗೆ ಸರ್ಕಾರವು ವಸತಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಧಿಸಬಹುದಾದ ನಿಯಮ ಮತ್ತು ಷರತ್ತುಗಳನ್ನು ತಪ್ಪದೇ ಪಾಲಿಸಬೇಕು 

 ಮನೆ ನಿರ್ಮಾಣ ಮಾಡುವ ಕ್ರಮ
 ಸ್ವಂತ ಫಲಾನುಭವಿಗಳಿಂದ
 ಫಲಾನುಭವಿಯೇ ಸ್ವಂತ ತನ್ನ ಮನೆಯನ್ನು ಸ್ಥಳಿಯವಾಗಿ ಅನುಮೋದಿತ ನಕ್ಷೆಗಳನ್ನು ಗುಣವಾಗಿ ಕಟ್ಟಿಕೊಳ್ಳಬಹುದು( ಇದಕ್ಕಾಗಿ ಕಾಮಗಾರಿ ಆದೇಶ ಹೊರಡಿಸಿ ನಿಗದಿತ ಕಂತುಗಳಲ್ಲಿ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆ ಮೂಲಕ ನೀಡಲಾಗುವುದು ನಿರ್ಮಾಣ ಸಂಸ್ಥೆ ಮೂಲಕ ಮನೆ ನಿರ್ಮಾಣಕ್ಕೆ ಅವಕಾಶ ಇರುವುದಿಲ್ಲ )

 ಮನೆ ನಿರ್ಮಾಣ ಅವಧಿ

 ಕನಿಷ್ಠ ನಾಲ್ಕು ತಿಂಗಳ ಒಳಗಾಗಿ ಮನೆಯನ್ನು ಪೂರ್ಣಗೊಳಿಸುವುದು

 ಒದಗಿಸಬೇಕಾದ ದಾಖಲೆಗಳು
 ಫಲಾನುಭವಿಯಿಂದ
 ವಸತಿಗಾಗಿ ನಿಗದಿತ ಅರ್ಜಿ
 ನಿವೇಶನ ಅಥವಾ ಮನೆಯನ್ನು ಸಾಲ ತೀರುವವರೆಗೂ ನಿಗಮದ ಪರವಾಗಿ ಅಡಮಾನ ಪತ್ರ ಬರೆದು ಕೊಡಬೇಕು
 ಜಾತಿ ಪ್ರಮಾಣ ಪತ್ರ ಅಥವಾ ಆದಾಯ ಪ್ರಮಾಣ ಪತ್ರ

 ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಥವಾ ಕಾರ್ಯನಿರ್ವಹಣಾಧಿಕಾರಿ ಅಥವಾ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಿಂದ

 ಗ್ರಾಮ ಪಂಚಾಯಿತಿ ಅಥವಾ ಇಲಾಖೆ ಯೋಜನೆಯ ಅಡಿಯಲ್ಲಿ ನಿಯಮಗಳನ್ನು ಪಾಲಿಸಿರುವ ಬಗ್ಗೆ ಹಾಗೂ ದಾಖಲೆಗಳನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ಬಗ್ಗೆ ದೃಢೀಕರಣ ಪತ್ರ
 ನಿಗದಿಪಡಿಸಿದ ನಮೂನೆಗಳಲ್ಲಿ ಪ್ರತಿ ತಿಂಗಳು ಅಥವಾ ವರ್ಷ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಗತಿ ವರದಿಗಳನ್ನು ತಪ್ಪದೆ ಸಲ್ಲಿಸಬೇಕು
 ವಸತಿ ಯೋಜನೆಯ ಯಶಸ್ವಿ ಅನುಷ್ಠಾನದ ಬಗ್ಗೆ ಸಂಬಂಧಿಸಿದ ಇತರೆ ಮಾಹಿತಿ ಇತ್ಯಾದಿ

 ಹೆಚ್ಚಿನ ವಿವರಗಳಿಗೆ ಈ ಕೆಳಕಂಡವರನ್ನು ಸಂಪರ್ಕಿಸಿ
 ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ
 ನಂಬರ್ 1 2 3 4
 ಐ ಟಿ ಪಾರ್ಕ್ 1ನೇ ಮಾಡಿ ನಾಲ್ಕನೇ ಮುಖ್ಯ ರಸ್ತೆ ಕೈಗಾರಿಕಾ ಪ್ರದೇಶ  ರಾಜಾಜಿನಗರ-580044
 ದೂರವಾಣಿ-23118888
 ಇ-ಮೇಲ್ -[email protected]
 ವೆಬ್ ಸೈಟ್ - http://ashraya.kar.nic.in/ 

 ನಿಮ್ಮ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಪಂಚಾಯತ್
 ಆಯಾಯ ಸಂಬಂಧಿಸಿದ ಜಿಲ್ಲೆಗಳು
 ಸಂಬಂಧಪಟ್ಟ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು
 ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು

]]>
Tue, 15 Apr 2025 16:27:34 +0530 shivuagrico
Free electric bike&ಉಚಿತ ಎಲೆಕ್ಟ್ರಿಕ್ ಬೈಕ್,ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ https://krushirushi.in/Free-electric-bike-2025 https://krushirushi.in/Free-electric-bike-2025 Free electric bike-ಉಚಿತ ಎಲೆಕ್ಟ್ರಿಕ್ ಬೈಕ್,ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ.2, 2025 ಆಗಿರುತ್ತದೆ.


ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಸಾಲಿನ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಎಲೆಕ್ಟ್ರಿಕ್ ದ್ವಿಚಕ್ರ ವಾಹನ, ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಎಂದಿದೆ.

ಬೀದಿ ಬದಿ ವ್ಯಾಪಾರಸ್ಥರಿಗೆ ಇ-ವೆಂಡಿಂಗ್ ವಾಹನವನ್ನು ಖರೀದಿಸಲು ಆರ್ಥಿಕ ಸಹಾಯ ಮಾಡಲಾಗುತ್ತದೆ. ಮಾನ್ಯುಯಲ್ ವೆಂಡಿಂಗ್ ವಾಹನ ಹಾಗೂ ಎಲೆಕ್ಟ್ರಿಕಲ್ ಇ-ವೆಂಡಿಂಗ್ ವಾಹನ ಖರೀದಿಸಲು ಸಹಾಯಧನ ಮಾಡಲಾಗುತ್ತದೆ ಎಂದು ತಿಳಿಸಿದೆ.

ಇ-ವೆಂಡಿಂಗ್ ವಾಹನದ ಗರಿಷ್ಠ ಮೊತ್ತ ರೂ.1,50,000 ಆಗಿರುತ್ತದೆ. ಇದರಲ್ಲಿ ಶೇ.90ರಷ್ಟು ಬಿಬಿಎಂಪಿ ಸಹಾಯಧನವಾಗಿದ್ದರೇ, ಶೇ.10ರಷ್ಟು ಬಂಡವಾಳ ನೀಡಲು ಸಿದ್ಧರಿರುವ ಬೀದಿ ಬದಿಯ ವ್ಯಾಪಾರಿಗಳು ಇ-ವೆಂಡಿಂಗ್ ವಾಹನ ಖರೀದಿಸಲು ಅರ್ಜಿ ಸಲ್ಲಿಸಬಹುದಾಗಿದೆ ಎಂಬುದಾಗಿ ಹೇಳಿದೆ.

ಯಾವೆಲ್ಲಾ ವಾಹನ ಖರೀದಿಗೆ ಸಹಾಯಧನ?

ಮಾನ್ಯುಯಲ್ ವೆಂಡಿಂಗ್ ವಾಹನ
ಎಲೆಕ್ಟ್ರಿಕಲ್ ಇ-ವೆಂಡಿಂಗ್ ವಾಹನ
ತರಕಾರಿ ಇ-ವೆಂಡಿಂಗ್ ವಾಹನ, ಹೂ ಮಾರಾಟ ಇ-ವೆಂಡಿಂಗ್ ವಾಹನ, ಐಸ್ ಕ್ರೀಂ ಇ-ವೆಂಡಿಂಗ್ ವಾಹನ, ಪ್ರೂಟ್ಸ್ ಇ-ವೆಂಡಿಂಗ್ ವಾಹನ, ಪ್ರೂಟ್ ಜ್ಯೂಸ್ ಇ-ವೆಂಡಿಂಗ್ ವಾಹನ, ಪಾನಿಪೂರಿ ಮತ್ತು ಚಾಟ್ಸ್ ಇ-ವೆಂಡಿಂಗ್ ವಾಹನ, ಫಾಸ್ಟ್ ಪುಡ್ ಇ-ವೆಂಡಿಂಗ್ ವಾಹನ, ಬಟ್ಟೆ ಇ-ವೆಂಡಿಂಗ್ ವಾಹನ ಹಾಗೂ ಇತರೆ ಇ-ವೆಂಡಿಂಗ್ ವಾಹನ ಖರೀದಿಸಲು ಆರ್ಥಿಕ ನೆರವಿನ ಸಹಾಯಧನವನ್ನು ಬಿಬಿಎಂಪಿ ನೀಡಲಿದೆ.

ಅರ್ಜಿಯೊಂದಿಗೆ ಈ ದಾಖಲೆ ಸಲ್ಲಿಕೆ ಕಡ್ಡಾಯ

ವಾಸ ದೃಢೀಕರಣ ಪ್ರಮಾಣ ಪತ್ರ
ಆಧಾರ್ ಪ್ರತಿ
ವಯಸ್ಸಿನ ದೃಢೀಕರಣ ಪ್ರಮಾಣ ಪತ್ರ
ಪಡಿತರ ಚೀಟಿ
ವಾರ್ಷಿಕ ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರ
ತೃತೀಯ ಲಿಂಗ ಎಂಬುದರ ಬಗ್ಗೆ ಸಂಬಂಧ ಪಟ್ಟ ಇಲಾಖೆಯ ಪ್ರಮಾಣ ಪತ್ರ
ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ
ಕಾರ್ಯಕ್ರಮಕ್ಕೆ ತಕ್ಕಂತೆ ಅಗತ್ಯವಾಗಿ ಬೇಕಾಗಿರುವ ದಾಖಲೆಗಳು.


ಈ ಮೇಲ್ಕಂಡ ದಾಖಲೆಗಳೊಂದಿಗೆ ಮಹಾನಗರ ಪಾಲಿಕೆ ಕಚೇರಿಗೆ ತೆರಳಿ, 2024-25ನೇ ಸಾಲಿನ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ನಮೂನೆಯನ್ನು ಪಡೆದು, ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಲ್ಲವೇ ಈ ಸುದ್ದಿಯ ಕೆಳಗಿರುವಂತ ಅರ್ಜಿಯನ್ನು ಭರ್ತಿ ಮಾಡಿ, ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದು. ಈ ಸಂಬಂಧದ ಹೆಚ್ಚಿನ ಮಾಹಿತಿಗಾಗಿ https://bbmp.gov.in/home  ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ.

  

]]>
Mon, 14 Apr 2025 23:08:26 +0530 shivuagrico
Pmkisan eligibility&ತುಂಡು ಕೃಷಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರಿಗೂ ಪಿಎಂ ಕಿಸಾನ್ ಹಣ&ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್,ಹಾಗಾದರೆ ಅರ್ಹತೆಯ ಮಾನದಂಡಗಳೇನು? https://krushirushi.in/Pmkisan-eligibility-2024 https://krushirushi.in/Pmkisan-eligibility-2024 Pmkisan eligibility-ತುಂಡು ಕೃಷಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರಿಗೂ ಪಿಎಂ ಕಿಸಾನ್ ಹಣ-ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್


ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ(Pradan mantri kisan samman yojane) 
ಅಡಿ ಅರ್ಹ ಎಲ್ಲ ರೈತರಿಗೆ ಸೌಲಭ್ಯ ನೀಡಲು ಕೇಂದ್ರ ಸರ್ಕಾರ ಸಿದ್ದವಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಹೇಳಿದರು.


ಲೋಕಸಭೆಯಲ್ಲಿ ಮಂಗಳವಾರ ಪ್ರಶೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಭೂ ರಹಿತರಿಗೆ ಈ ಸೌಲಭ್ಯ ನೀಡುವುದಿಲ್ಲ. ಆದರೆ, ತುಂಡು ಕೃಷಿ ಭೂಮಿಯನ್ನಾದರೂ ಹೊಂದಿರಬೇಕು ಎಂದು ವಿವರಿಸಿದರು. 


'ಈ ಯೋಜನೆಯಡಿ ಕೇಂದ್ರ ಸರ್ಕಾರವು ಈವರೆಗೆ 19 ಕಂತುಗಳಲ್ಲಿ ₹3.68 ಲಕ್ಷ ಕೋಟಿ ಮೊತ್ತವನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದೆ' ಎಂದರು. 


ಯೋಜನೆಯ ಭಾಗವಾಗಿಲ್ಲದ ಎಲ್ಲ ಅರ್ಹ ರೈತರಿಗೆ ವಾರ್ಷಿಕ ₹6,000 ನಗದು ಪ್ರಯೋಜನ ನೀಡಲು ಸರ್ಕಾರ ಸಿದ್ಧವಾಗಿದೆ. ಅಂತಹ ರೈತರಿಗೆ ಹಿಂದಿನ ಕಂತುಗಳನ್ನು ನೀಡಲು ಸಿದ್ಧರಿದ್ದೇವೆ. ಅಂತಹ ರೈತರನ್ನು ಗುರುತಿಸಿ ಯೋಜನೆಯಲ್ಲಿ ಸೇರಿಸಲು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಅವರು ಕೋರಿದರು.

ಪಿಎಂ ಕಿಸಾನ್(kisan samman) ಅರ್ಹತೆಯ ಮಾನದಂಡಗಳೇನು?
ಎಲ್ಲ ಅರ್ಹ ಫಲಾನುಭವಿಗಳು ಕನಿಷ್ಠ ಪ್ರಮಾಣದ ಭೂಮಿ ಹೊಂದಿರಬೇಕು. ಇ-ಕೆವೈಸಿ ಮಾಡಿಸಿಕೊಳ್ಳಬೇಕು ಮತ್ತು ಪಿಎಂ-ಕಿಸಾನ್ ಪೋರ್ಟಲ್‌ನಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು. 
ನಿಧಿಯನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಗಾಯಿಸಲಾಗುತ್ತದೆ ಎಂದು ಅವರು ಹೇಳಿದರು.

ಇಲ್ಲಿಯವರೆಗೂ 19 ಕಂತುಗಳಲ್ಲಿ 3.68 ಲಕ್ಷ ಕೋಟಿ ಪಿಎಂ ಕಿಸಾನ್ ಹಣ ರೈತರ ಖಾತೆಗೆ


ಇದುವರೆಗೆ 3.68 ಲಕ್ಷ ಕೋಟಿ ರೂಪಾಯಿಗಳನ್ನು 19 ಕಂತುಗಳಲ್ಲಿ ದೇಶದಾದ್ಯಂತದ ರೈತರಿಗೆ ವಿತರಿಸಲಾಗಿದೆ

ನಿಮಗೇಷ್ಟು ಜಮಾ ಹೀಗೆ ಚೆಕ್ ಮಾಡಿ-Pmkisan beneficiary status 

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/

ಮೊದಲು know your status ಮೇಲೆ ಕ್ಲಿಕ್ ಮಾಡಿ

ನಂತರ know your register number ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ

ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.

ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ

ನಂತರ update your details ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ

 Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.

ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ

Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.

FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ  ಕಾರಣ ಮತ್ತು ಪರಿಹಾರ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

fruitspmk.gov.in ಪೋರ್ಟಲ್ ನಲ್ಲಿ

1

ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ

ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು                                                                     ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು

ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ  (NIC)                     ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ.            ಆ) ಸಮಸ್ಯಾತ್ಮಕ  ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ.

2

ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು

ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ

ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ    ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ

3

ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು

 ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ

ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ   ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ

4

ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ

ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ

OPERATOR ಲಾಗಿನ್ (RSK, ADA office, JDA office)  OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು

5

01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ

ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ

ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ)

6

Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು

ಜಿಲ್ಲೆಗಳಲ್ಲಿ  OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ

AAO ಲಾಗಿನ್  (RSK, ADA office, JDA office)  AAO ಲಾಗಿನ್ನಲ್ಲಿ  ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ,  ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

7

ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ

ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ)

AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.

8

PFMS rejected

Aadhaar Number is not seeded in NPCI

ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ

Bank Name And IFSC Code are not related to each other

ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ

Bank Name is not as per PFMS Bank Master.

Beneficiary is rejected as Account Type is other than SB / SBA / JD

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ)

Duplicate Beneficiary Name , Bank Account No and Bank Name not allowed for same scheme

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

IFSC Code  either not present or currently inactive in tbl BankBranch

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

Incorrect Aadhaar Number

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

One or more mandatory tags values are missing.

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

Rejected by Bank, Account No does not exist in Bank/INVALID/CLOSED

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

9

Amount credited to Account Number-NA

Aadhaar number based payment by GoI

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ.

10

PAYMENT STOPPED BY STATE

 XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳಿದ್ದರೆ ಕೇಂದ್ರ ಕಚೇರಿ ಮಾಹಿತಿ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

11

Transaction failed

ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ.

12

ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ

OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳ   ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

13

ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು

ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ.

ಕೇಂದ್ರ ಸರ್ಕಾರ ದ   pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ.

]]>
Mon, 14 Apr 2025 23:06:50 +0530 shivuagrico
Gold rate today&ಬಂಗಾರದ ಬೆಲೆ 55,000 ಕ್ಕೆ ಇಳಿಯುತ್ತಾ? ಇಲ್ಲಾ 1 ಲಕ್ಷಕ್ಕೆ ಏರುತ್ತಾ? https://krushirushi.in/Gold-rate-today-2023 https://krushirushi.in/Gold-rate-today-2023 Gold rate today-ಬಂಗಾರದ ಬೆಲೆ 55,000 ಕ್ಕೆ ಇಳಿಯುತ್ತಾ? ಇಲ್ಲಾ 1 ಲಕ್ಷಕ್ಕೆ ಏರುತ್ತಾ?

ಚಿನ್ನದ ದರ (Gold Price) ಪ್ರತಿ 10 ಗ್ರಾಮ್‌ಗೆ 55 ಸಾವಿರ ರೂ.ಗೆ ಇಳಿಯುತ್ತದೆಯಂತೆ ಹೌದಾ? ಎಂಬ ಪ್ರಶ್ನೆಯನ್ನು ನೀವು ಕೇಳಿರಬಹುದು. ಆದರೆ ಮತ್ತೊಂದು ಕಡೆ ಮಾರುಕಟ್ಟೆಯಲ್ಲಿ ಈಗ 24 ಕ್ಯಾರಟ್ ಚಿನ್ನದ ದರ 95,670 ರೂ. ಎತ್ತರದ ಮಟ್ಟದಲ್ಲಿದೆ (Gold rates in India).


ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ದರ ಏರುಗತಿಯಲ್ಲಿದ್ದು, ಪ್ರತಿ ಔನ್ಸಿಗೆ 3,100 ಡಾಲರ್‌ ಮೇಲಿದೆ. ಹಾಗಾದರೆ ವಾಸ್ತವವಾಗಿ ಏನಾಗುತ್ತಿದೆ? ಬಂಗಾರದ ದರ 55 ಸಾವಿರ ರೂ.ಗೆ ಇಳಿಯಲಿದೆ ಎಂದು ಹೇಳಿದವರು ಯಾರು? ಈ ಎಲ್ಲ ವಿವರಗಳನ್ನು ತಿಳಿದುಕೊಳ್ಳೋಣ.

ಭಾರತದಲ್ಲಿ ಬಂಗಾರ ಎಂದರೆ ಬಹುತೇಕ ಎಲ್ಲರಿಗೂ ಇಷ್ಟ. ಅದಕ್ಕೆ ಸಂಬಂಧಿಸಿ ಜಗತ್ತಿನ ಯಾವುದೇ ಭಾಗದಲ್ಲಿ ಸಣ್ಣ ಸುದ್ದಿಯಾದರೂ, ಕೋಟ್ಯಂತರ ಭಾರತೀಯರಿಗೆ ಹೇಗೋ ತಲುಪುತ್ತೆ. ಇತ್ತೀಚೆಗೆ ಅದೊಂದು ಸುದ್ದಿ ಹರಡಿದೆ. ಚಿನ್ನದ ದರ 55 ಸಾವಿರ ರೂ.ಗೆ ಇಳಿಯುತ್ತದೆಯಂತೆ ಎಂಬ ಅಂತೆ ಕಂತೆಗಳ ಸುದ್ದಿ ಮನೆಮನೆಗೂ ಮುಟ್ಟಿದೆ. ಆದರೆ ನೆನಪಿಡಿ ಸದ್ಯದ ಪರಿಸ್ಥಿತಿ ನೋಡಿದರೆ ಇಂತಹ ಸಾಧ್ಯತೆ ಕಡಿಮೆ. ಜತೆಗೆ ಅದೊಂದು ವದಂತಿಯಷ್ಟೇ. ಮಾತ್ರವಲ್ಲದೆ ಚಿನ್ನದ ದರ 1 ಲಕ್ಷ ರೂ. ಗಡಿ ದಾಟಲಿದೆ ಎಂಬ ವರದಿಗಳಿವೆ. ಆ ವರದಿಗಳು ವಾಸ್ತವವಕ್ಕೆ ಹತ್ತಿರದಲ್ಲಿದೆ ಎನ್ನಬಹುದು. ಏಕೆಂದರೆ ಈಗಾಗಲೇ ಚಿನ್ನದ ದರ 94-95 ಸಾವಿರ ರೂ.ಯ ಉನ್ನತ ಮಟ್ಟದಲ್ಲಿ ಇದೆ.

]]>
Mon, 14 Apr 2025 18:07:30 +0530 shivuagrico
Karnataka rain alert IMD&ಇಂದಿನಿಂದ ಎಪ್ರೀಲ್ 19ರವರೆಗಿನ ಜಿಲ್ಲಾವಾರು ಮಳೆ ಮಾಹಿತಿ https://krushirushi.in/karnataka-rain-alert-IMD-2022 https://krushirushi.in/karnataka-rain-alert-IMD-2022 Karnataka rain alert IMD-ಇಂದಿನಿಂದ ಎಪ್ರೀಲ್ 19ರವರೆಗಿನ ಜಿಲ್ಲಾವಾರು ಮಳೆ ಮಾಹಿತಿ

ಮುಂದಿನ ಏಳು ದಿನಗಳವರೆಗೆ ಕರ್ನಾಟಕಕ್ಕೆ ಮುನ್ಸೂಚನೆ ಮತ್ತು ಎಚ್ಚರಿಕೆ:

ಇಂದಿನ ಹವಾಮಾನ - (ಏಪ್ರಿಲ್ 14, 2025):

ದಕ್ಷಿಣ ಕನ್ನಡ ಮತ್ತು ಉಡುಪಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದೆ


ಏಪ್ರಿಲ್ 15, 2025 ರಂದು

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ , ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ
ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಲಿದೆ. ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ (ಗಂಟೆಗೆ 40-50 ಕಿ.ಮೀ) ಮಳೆಯಾಗುವ ಸಾಧ್ಯತೆ ಇದೆ.


ದಿನ 4 (ಏಪ್ರಿಲ್ 16, 2025):

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.


ಏಪ್ರಿಲ್ 17, 2025:

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.


ದಿನ 6 (ಏಪ್ರಿಲ್ 18, 2025):

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಮೇಲೆ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.


ದಿನ 7 (ಏಪ್ರಿಲ್ 19, 2025):

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಮಧ್ಯಂತರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

]]>
Sun, 13 Apr 2025 22:39:17 +0530 shivuagrico
Crop loss compensation&ಅಕಾಲಿಕ ಆಲಿಕಲ್ಲು ಮಳೆಯಿಂದ 12,726 ಹೆಕ್ಟೇರ್ ಬೆಳೆ ಹಾನಿ,ಇಲ್ಲಿಯವರೆಗೂ ಜಮಾ ಆದ ಬೆಳೆ ಪರಿಹಾರ ಚೆಕ್ ಮಾಡಿ https://krushirushi.in/Crop-loss-compensation-2021 https://krushirushi.in/Crop-loss-compensation-2021 Crop loss compensation-ಅಕಾಲಿಕ ಆಲಿಕಲ್ಲು ಮಳೆಯಿಂದ 12,726 ಹೆಕ್ಟೇರ್ ಬೆಳೆ ಹಾನಿ,ಇಲ್ಲಿಯವರೆಗೂ ಜಮಾ ಆದ ಬೆಳೆ ಪರಿಹಾರ ಚೆಕ್ ಮಾಡಿ


ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ 12,726 
ಹೆಕ್ಟರ್ ಬೆಳೆ ನಾಶ ಆಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ಬಹಳ ಕಡೆ ನಷ್ಟವಾಗಿದ್ದು, 12,726 ಹೆಕ್ಟರ್ ಬೆಳೆ ನಾಶ ಆಗಿದೆ. ಎನ್‌ಡಿಆರ್‌ಎಫ್‌ ಮೂಲಕ ಹಣ ನೀಡಿದರೆ ರೈತರಿಗೆ ಜಮಾ ಮಾಡಲಾಗುವುದು.

Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Sun, 13 Apr 2025 18:38:57 +0530 shivuagrico
ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ&Aadhaar not linked croploss farmers list https://krushirushi.in/Aadhaar-not-linked-croploss-farmers-list-2020 https://krushirushi.in/Aadhaar-not-linked-croploss-farmers-list-2020 ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ-Aadhaar not linked croploss farmers list

15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635 

ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/AadharNotSeededReport.aspx

ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ

Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ - https://krushirushi.in/Tahasildar-varification-status-approved-1634

]]>
Sun, 13 Apr 2025 05:46:54 +0530 shivuagrico
Mansoon rain&ಮುಂಗಾರು ಮಳೆಯ ಮೇಲೆ ಪ್ರಭಾವ ಬೀರಲಿದೆ ಅವಧಿ ಪೂರ್ವ ಮಳೆ  https://krushirushi.in/Mansoon-rain-2019 https://krushirushi.in/Mansoon-rain-2019 Mansoon rain-ಮುಂಗಾರು ಮಳೆಯ ಮೇಲೆ ಪ್ರಭಾವ ಬೀರಲಿದೆ ಅವಧಿ ಪೂರ್ವ ಮಳೆ 

ಮುಂಗಾರು ಮಳೆಯ ತೀವ್ರತೆ ಹೆಚ್ಚಳವಾಗಲು ಕಾರಣವಾಗುವ ಪೆಸಿಫಿಕ್ ಸಾಗರದ ಲಾ ನಿನಾ ಈಗಾಗಲೇ ಅಂತ್ಯಗೊಂಡಿದ್ದು, ಮುಂಗಾರು ಮಳೆ ಈ ಬಾರಿ ಸಾಮಾನ್ಯವಾಗಿರಲಿದೆ ಎಂದು ಅಮೆರಿಕದ ತಜ್ಞರು ಹೇಳಿದ್ದಾರೆ. ಹೀಗಾಗಿ ದೇಶದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆಯ ಸಮಯದಲ್ಲಿ ಯಾವುದೇ ಅತಿವೃಷ್ಟಿಯ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಎನ್ನಲಾಗಿದೆ. ಅಲ್ಲದೇ ಹಿಂದೂ ಮಹಾಸಾಗರದಲ್ಲೂ ಮಾರುತಗಳ ಪರಿಸ್ಥಿತಿ ತಟಸ್ಥವಾಗಿರುವುದರಿಂದ ನೈಋತ್ಯ ಮುಂಗಾರು ಮಾರುತಗಳು ಈ ಬಾರಿ ಸಾಮಾನ್ಯವಾಗಿರಲಿವೆ ಎಂದು ಅವರು ಹೇಳಿದ್ದಾರೆ. 12 ವರ್ಷಗಳಲ್ಲಿ 2013, 2019 ಮತ್ತು 2024ರಲ್ಲಿ ಮಾತ್ರ ಪೆಸಿಫಿಕ್ ಸಾಗರದ ಎಲ್‌ನಿನೋ ಮತ್ತು ಲಾ ನಿನಾ ಪರಿಸ್ಥಿತಿಗಳು ತಟಸ್ಥವಾಗಿದ್ದವು ಎಂದು ತಿಳಿಸಿದ್ದಾರೆ.

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಅರಬ್ಬಿ ಸಮುದ್ರ ಕಡೆಯಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಮೋಡಗಳು ಪೂರ್ವಕ್ಕೆ ಅಂದರೆ ಒಳನಾಡು ಕಡೆ ಚಲಿಸುತ್ತಿದೆ.
ಮುನ್ಸೂಚನೆ ಇದ್ದರೂ ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಚಲಿಸುವ ಮೋಡಗಳಿಂದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. 


ಈಗಿನಂತೆ ಎಪ್ರಿಲ್ 13ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 13ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಬಳ್ಳಾರಿ ಜಿಲ್ಲೆಯಲ್ಲೂ ಮಳೆ ಸಾಧ್ಯತೆ ಇದೆ. 


ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಎಪ್ರಿಲ್ 13ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುವ ಲಕ್ಷಣಗಳಿವೆ. 

ಟೈಮ್ಸ್ ಆಫ್ ಇಂಡಿಯಾ ವರದಿಯಂತೆ ಲಾನಿನಾ ಅವಧಿ ಮುಕ್ತಾಯದ ಹಂತದಲ್ಲಿದೆ. 
ಪೆಸಿಫಿಕ್ ಸಾಗರದ ಮೇಲ್ಮೈ ಉಷ್ಣತೆ ತೀರ ಬಿಸಿಯೂ ಅಲ್ಲ ಅಥವಾ ತೀರ ತಣ್ಣನೆಯೂ ಅಲ್ಲದ ತಟಸ್ಥ ಸ್ಥಿತಿಗೆ ತಲಪುವ ನಿರೀಕ್ಷೆಯಿದೆ. 
ಇದರಿಂದ 2025ನೇ ಸಾಲಿನ ನಮ್ಮ ಮುಂಗಾರು ಸಾಮಾನ್ಯವಿರುವ ಸಾಧ್ಯತೆ ಇದೆ.

https://timesofindia.indiatimes.com/india/la-nina-over-india-unlikely-to-see-drought-or-extreme-rain/articleshow/120221899.cms 

]]>
Sat, 12 Apr 2025 21:39:40 +0530 shivuagrico
ವಾರದೊಳಗೆ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ&Bele parihara list https://krushirushi.in/Bele-parihara-list-2018 https://krushirushi.in/Bele-parihara-list-2018 ವಾರದೊಳಗೆ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ-Bele parihara list 2024

ಕೇಂದ್ರ ಸರ್ಕಾರದ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 2024-25 ನೇ ಸಾಲಿನಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಕೇಂದ್ರ ಸರ್ಕಾರದಿಂದ 2 ನೇ ಕಂತಿನ ಅನುದಾನ ರೂ. 366.00 ಕೋಟಿಗಳನ್ನು ಮೇಲೆ ಓದಲಾದ (7) ರ ಪತ್ರದಲ್ಲಿ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುತ್ತದೆ. ಮೇಲೆ ಓದಲಾದ (8) ರ ಹಿಂಬರಹದಲ್ಲಿ ಆರ್ಥಿಕ ಇಲಾಖೆಯು 2 ನೇ ಕಂತಿನ ರಾಜ್ಯದ ಪಾಲು ರೂ. 122.00 ಕೋಟಿಗಳನ್ನು ಬಿಡುಗಡೆ ಮಾಡಿರುತ್ತದೆ.

ವಿವತ್ತು ನಿರ್ವಹಣೆಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರದ ಗ್ರಹ ಮಂತ್ರಾಲಯವು ಹೊರಡಿಸಿರುವ ಮಾರ್ಗಸೂಚಿಗಳನ್ವಯ ವಿಪತ್ತು ನಿರ್ವಹಣೆಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಿರ್ದೇಶಕರು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ರವರಿಗೆ ಹಾಗೂ ನೈಸರ್ಗಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ತಕ್ಷಣ ನಿಭಾಯಿಸಲು ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡುವುದು ಅವಶ್ಯಕವಾಗಿರುತ್ತದೆ.

ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

]]>
Sat, 12 Apr 2025 05:38:45 +0530 shivuagrico
Karnataka rain alert&ಈ ಜಿಲ್ಲೆಗಳಲ್ಲಿ ಮುಂದಿನ 10 ದಿನ ಮಳೆ ಮುಂದುವರಿಕೆ https://krushirushi.in/karnataka-rain-alert-2017 https://krushirushi.in/karnataka-rain-alert-2017 Karnataka rain alert-ಈ ಜಿಲ್ಲೆಗಳಲ್ಲಿ ಮುಂದಿನ 10 ದಿನ ಮಳೆ ಮುಂದುವರಿಕೆ

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಈಗಾಗಲೇ ಮುಂಜಾನೆ ಉತ್ತಮ ಮಳೆಯಾಗಿದೆ. ಆದರೂ ಸಂಜೆ ಅಥವಾ ರಾತ್ರಿ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಆದರೆ ಗಾಳಿಯ ಪ್ರಭಾವ ಪ್ರಮುಖವಾಗಿದೆ. ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಘಟ್ಟ ಪ್ರದೇಶದ ಮೋಡಗಳು ಪೂರ್ವಕ್ಕೆ ಅಂದರೆ ಬಂಗಾಳಕೊಲ್ಲಿಯ ಕಡೆ ಚಲಿಸುವ ಸಾಧ್ಯತೆಗಳಿವೆ. ಹೀಗೆ ಸಂಭವಿಸಿದರೆ ಮಳೆಯ ಸಾಧ್ಯತೆ ಕಡಿಮೆಯಾಗಬಹುದು. 
ಈಗನಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿದೆ. 

ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಎಪ್ರಿಲ್ 12ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದರೂ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಪೂರ್ವಕ್ಕೆ ಚಲಿಸುವ ಮೋಡಗಳಿಂದ ಬಳ್ಳಾರಿ ತನಕವೂ ಮಳೆಯ ಸಾಧ್ಯತೆ ಇದೆ. 


ದಕ್ಷಿಣ ಒಳನಾಡಿನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 


ಈಗಿನಂತೆ ದಿನ ಬಿಟ್ಟು ದಿನ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಗಳಿವೆ.

]]>
Fri, 11 Apr 2025 21:35:13 +0530 shivuagrico
Bele parihara list&ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ,ನಿಮಗೇಷ್ಟು ಜಮಾ ಚೆಕ್ ಮಾಡಿ https://krushirushi.in/Bele-parihara-list-2016 https://krushirushi.in/Bele-parihara-list-2016 Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Fri, 11 Apr 2025 05:14:50 +0530 shivuagrico
Without security loan&ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಆರ್ ಬಿಐ https://krushirushi.in/Without-security-loan-2015 https://krushirushi.in/Without-security-loan-2015 Without security loan-ರೈತರಿಗೆ ಅಡಮಾನವಿಲ್ಲದ ಸಾಲಮಿತಿ ಹೆಚ್ಚಿಸಿದ ಆರ್ ಬಿಐ,ನಿಮ್ಮ ಸಾಲಮಿತಿ ಹೀಗೆ ಚೆಕ್ ಮಾಡಿ

ಭಾರತೀಯ ರಿಸರ್ವ್ ಬ್ಯಾಂಕ್ (Reserve bank India) ಮೇಲಾಧಾರ ರಹಿತ ಕೃಷಿ ಸಾಲದ ಮಿತಿಯನ್ನು.ಗೆ ಹೆಚ್ಚಿಸಿದೆ. ಈ ಕ್ರಮವು ಸಣ್ಣ ರೈತರಿಗೆ ಸಹಾಯ ಮಾಡುತ್ತದೆ ಮತ್ತು ಕೃಷಿ ವಲಯವನ್ನು ಬಲಪಡಿಸುತ್ತದೆ.


ರೈತರ ಮೇಲಿನ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು ಮತ್ತು ಹೆಚ್ಚುತ್ತಿರುವ ಕೃಷಿ ಇನ್ಪುಟ್ ವೆಚ್ಚವನ್ನು ನಿಭಾಯಿಸಲು, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) (RBI)ಅಸುರಕ್ಷಿತ ಕೃಷಿ ಸಾಲದ ಮಿತಿಯನ್ನು 1.6 ಲಕ್ಷ ರೂ.ಗಳಿಂದ 2 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ.

ಜನವರಿ 1, 2025 ರಿಂದ ಜಾರಿಗೆ ಬರಲಿರುವ ಪರಿಷ್ಕೃತ ಮಿತಿಯು ದೇಶಾದ್ಯಂತ ಲಕ್ಷಾಂತರ ರೈತರಿಗೆ ಪ್ರಯೋಜನವನ್ನು ನೀಡುವ ನಿರೀಕ್ಷೆಯಿದೆ ಎಂದು ಕೃಷಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

 
ಕೃಷಿ ಕ್ಷೇತ್ರದ ಮೇಲೆ ಹಣದುಬ್ಬರದ ಒತ್ತಡಗಳು ಪರಿಣಾಮ ಬೀರುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರೈತ ಸಮುದಾಯದ ಶೇ. 86 ಕ್ಕಿಂತ ಹೆಚ್ಚು ಪಾಲನ್ನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರು ಸಾಲ ಪಡೆಯಲು ಕಷ್ಟಪಡುತ್ತಾರೆ. ಸಾಲದ ಮಿತಿಯನ್ನು ಹೆಚ್ಚಿಸುವ ಮೂಲಕ, ಸೀಮಿತ ಆಸ್ತಿಗಳನ್ನು ಹೊಂದಿರುವ ರೈತರಿಗೆ ನಿರ್ಣಾಯಕ ಜೀವನಾಡಿಯನ್ನು ಒದಗಿಸುವ ಮೂಲಕ, ಮೇಲಾಧಾರ ಹೊರೆಯಿಲ್ಲದೆ ಸಾಲದ ಪ್ರವೇಶವನ್ನು ಬಲಪಡಿಸುವ ಗುರಿಯನ್ನು ರಿಸರ್ವ್ ಬ್ಯಾಂಕ್ ಹೊಂದಿದೆ.

 
ಹೊಸ ಮಿತಿಯನ್ನು ಸಂಬಂಧಿತ ಚಟುವಟಿಕೆಗಳಿಗೆ ಸಾಲಗಳಿಗೆ ವಿಸ್ತರಿಸಲಾಗಿದೆ, ಇದು ರೈತರಿಗೆ ತಮ್ಮ ಆದಾಯದ ಹರಿವನ್ನು ವೈವಿಧ್ಯಗೊಳಿಸಲು ಅವಕಾಶಗಳನ್ನು ಒದಗಿಸುತ್ತದೆ. ಪರಿಷ್ಕೃತ ಮಿತಿಯೊಳಗೆ ಸಾಲಗಳಿಗೆ ಮೇಲಾಧಾರ ಮತ್ತು ಮಾರ್ಜಿನ್ ಅವಶ್ಯಕತೆಗಳನ್ನು ಮನ್ನಾ ಮಾಡುವಂತೆ ಬ್ಯಾಂಕುಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ರೈತರಿಗೆ ಸಕಾಲಿಕ ನೆರವು ದೊರೆಯುವಂತೆ ನೋಡಿಕೊಳ್ಳಲು ಪರಿಷ್ಕೃತ ಮಾರ್ಗಸೂಚಿಗಳ ಅನುಷ್ಠಾನವನ್ನು ತ್ವರಿತಗೊಳಿಸುವಂತೆ ರಿಸರ್ವ್ ಬ್ಯಾಂಕ್ ಬ್ಯಾಂಕುಗಳನ್ನು ಒತ್ತಾಯಿಸಿದೆ.

 
ಕಿಸಾನ್ ಕ್ರೆಡಿಟ್ ಕಾರ್ಡ್(Kisan credit card)

ಈ ಉಪಕ್ರಮದ ಪರಿಣಾಮವನ್ನು ಹೆಚ್ಚಿಸಲು, ಬ್ಯಾಂಕುಗಳು ರೈತರು ಮತ್ತು ತಮ್ಮ ಕಾರ್ಯಾಚರಣೆಯ ಕ್ಷೇತ್ರಗಳಲ್ಲಿನ ಇತರ ಪಾಲುದಾರರನ್ನು ಗುರಿಯಾಗಿಸಿಕೊಂಡು ಜಾಗೃತಿ ಅಭಿಯಾನಗಳನ್ನು ಪ್ರಾರಂಭಿಸುತ್ತವೆ. ಹಣಕಾಸಿನ ಬೆಂಬಲ ಕಾರ್ಯವಿಧಾನಗಳನ್ನು ಸುಧಾರಿಸುವತ್ತ ಗಮನ ಹರಿಸಲಾಗುವುದು, ವಿಶೇಷವಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಬಳಕೆಯನ್ನು ಹೆಚ್ಚಿಸುವುದು.

ಈ ಕ್ರಮವು ಮಾರ್ಪಡಿಸಿದ ಬಡ್ಡಿ ಸಬ್ಸಿಡಿ ಯೋಜನೆ (MISS) ನಂತಹ ಸರ್ಕಾರಿ ಉಪಕ್ರಮಗಳಿಗೆ ಅನುಗುಣವಾಗಿದೆ, ಇದು ತಕ್ಷಣದ ಪಾವತಿದಾರರಿಗೆ 4% ಸಬ್ಸಿಡಿ ಬಡ್ಡಿದರದಲ್ಲಿ 3 ಲಕ್ಷ ರೂ.ಗಳವರೆಗೆ ಸಾಲವನ್ನು ಒದಗಿಸುತ್ತದೆ. ಒಟ್ಟಾರೆಯಾಗಿ, ಈ ಕ್ರಮಗಳು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಮತ್ತು ಗ್ರಾಮೀಣ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ವಿಶಾಲವಾದ ಕಾರ್ಯತಂತ್ರದ ಭಾಗವಾಗಿದೆ.

 
ರಿಸರ್ವ್ ಬ್ಯಾಂಕಿನ ಈ ನಿರ್ಧಾರವನ್ನು ಆರ್ಥಿಕ ಸೇರ್ಪಡೆಯತ್ತ ಒಂದು ಮಹತ್ವದ ಹೆಜ್ಜೆ ಎಂದು ತಜ್ಞರು ಶ್ಲಾಘಿಸಿದ್ದಾರೆ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ, ಮೇಲಾಧಾರ ಅವಶ್ಯಕತೆಗಳನ್ನು ತೆಗೆದುಹಾಕುವುದು ಪರಿವರ್ತನಾತ್ಮಕವಾಗಿರುತ್ತದೆ, ಇದು ಅವರ ಕಾರ್ಯಾಚರಣೆಗಳಲ್ಲಿ ಹೆಚ್ಚಿನ ವಿಶ್ವಾಸ ಮತ್ತು ಹೂಡಿಕೆಯನ್ನು ಸಕ್ರಿಯಗೊಳಿಸುತ್ತದೆ ಎಂದು ಸರ್ಕಾರದ ಕೃಷಿ MSP ಸಮಿತಿಯ ಸದಸ್ಯ ಬಿನೋದ್ ಆನಂದ್ ಹೇಳಿದರು. ಹೆಚ್ಚಿದ ಸಾಲ ಮಿತಿಯು ಕೃಷಿ ವಲಯವನ್ನು ಬಲಪಡಿಸುವುದಲ್ಲದೆ, ಗ್ರಾಮೀಣ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.


Bele sala status-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ-crop loan status 

ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್(Survey number) ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.

 ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ(Bele sala) ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.

 ಸಾಲ(crop loan status)ವಿವರ ಚೆಕ್ ಮಾಡುವುದು ಹೇಗೆ?

 ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು 

https://landrecords.karnataka.gov.in/Service2/

 ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ. 

 ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ

  ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ

ನಂತರ view ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ

ಇದನ್ನೂ ಓದಿ

ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427 

 ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.

 ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.

  ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ.  ಎಂಬ ಮಾಹಿತಿ ಇರುತ್ತದೆ.


 ಈ ಮಾಹಿತಿ ರೈತರಿಗೆ ತುಂಬಾ ಅನುಕೂಲವಾಗಿದೆ ಸರ್ವೇ ನಂಬರ್ ನಮೂದಿಸಿದರೆ ಸಾಕು ರೈತರು ದೇಶದ ಯಾವುದೇ ಮೂಲೆಯಿಂದಲೂ ಮಾಹಿತಿ ಪಡೆಯಬಹುದು. ಕೇವಲ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವ ಮಾಹಿತಿ ಎಲ್ಲವೂ ರೈತರಿಗೆ ಸಿಗಲಿದೆ.

]]>
Thu, 10 Apr 2025 13:52:02 +0530 shivuagrico
Bele vime&ಈ ಜಿಲ್ಲೆಯ 21,786 ರೈತರ ಖಾತೆಗೆ 30.05 ಕೋಟಿ ಬೆಳೆ ವಿಮೆ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Bele-vime-2014 https://krushirushi.in/Bele-vime-2014 Belevime-ಈ ಜಿಲ್ಲೆಯ 21,786 ರೈತರ ಖಾತೆಗೆ 30.05 ಕೋಟಿ ಬೆಳೆ ವಿಮೆ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

2024-25 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(Pradan mantri fasal bheema yojane) ಯೋಜನೆಯಡಿ ಒಟ್ಟು 21,786 ರೈತರಿಗೆ ರೂ. 30.05 ಕೋಟಿ ಬೆಳೆವಿಮೆ(Belevime) ಪರಿಹಾರ ಮಂಜೂರಾಗಿದ್ದು, ಹಂತ ಹಂತವಾಗಿ ರೈತರ ಖಾತೆಗೆ ಬೆಳೆವಿಮೆ ಪರಿಹಾರ ಜಮಾ ಆಗುವುದು ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು ತಿಳಿಸಿದ್ದಾರೆ.

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಬೆಳೆವಿಮೆ ಹಣ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Thu, 10 Apr 2025 05:21:20 +0530 shivuagrico
Karnataka rain alert IMD&ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುಂದುವರಿಕೆ https://krushirushi.in/karnataka-rain-alert-IMD-2013 https://krushirushi.in/karnataka-rain-alert-IMD-2013 Karnataka rain alert IMD-ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಮಧ್ಯಾಹ್ನ ನಂತರ, ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 15ರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ವಾತಾವರಣದ ಜೊತೆಗೆ ಮಧ್ಯಾಹ್ನ ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಅಲ್ಲಲ್ಲಿ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ನಾಳೆಯಿಂದ ಆಗಸ್ಟ್ 16ರ ತನಕ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿದ್ದು, ನಂತರ ಮಳೆ ಸ್ವಲ್ಪ ಹೆಚ್ಚಾಗುವ ಸೂಚನೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 11ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ಒಡಿಸ್ಸಾ, ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಆಗಸ್ಟ್ 15ರಿಂದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಲಿಸುವ ಪಥವನ್ನು ಕಾದು ನೋಡಬೇಕಾಗಿದೆ.

]]>
Wed, 09 Apr 2025 20:44:21 +0530 shivuagrico
Free sheep farming training&ಉಚಿತ ಊಟ ವಸತಿಯೊಂದಿಗೆ 13 ದಿನಗಳ ಕುರಿ ಸಾಕಾಣಿಕೆ,ಹೈನುಗಾರಿಕೆ,ಎರೆಹುಳು ಗೊಬ್ಬರ ತಯಾರಿಕೆ ತರಭೇತಿ https://krushirushi.in/Free-sheep-farming-training-2012 https://krushirushi.in/Free-sheep-farming-training-2012 Free sheep farming training-ಉಚಿತ ಊಟ ವಸತಿಯೊಂದಿಗೆ 13 ದಿನಗಳ ಕುರಿ ಸಾಕಾಣಿಕೆ,ಹೈನುಗಾರಿಕೆ,ಎರೆಹುಳು ಗೊಬ್ಬರ ತಯಾರಿಕೆ ತರಭೇತಿ-Uchitha kuri sakanike tharabethi 

*ಸಮಗ್ರ ಕೃಷಿ ತರಬೇತಿ*
ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ 13 ದಿನಗಳ ಹೈನುಗಾರಿಕೆ, ಕುರಿ ಸಾಕಾಣಿಕೆ, ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಯನ್ನು ದಿನಾಂಕ 15.4.2025 ರಿಂದ 27.4.2025 ರ ವರೆಗೆ ಊಟ ವಸತಿಯೊಂದಿಗೆ ಉಚಿತವಾಗಿ ನೀಡಲಾಗುವುದು 
ಆಸಕ್ತಿಯುಳ್ಳ ಅಭ್ಯರ್ಥಿಗಳು ಕೂಡಲೇ ಕೆಳಗಿನ ಸಂಖ್ಯೆಗೆ ಕರೆ ಮಾಡಿರಿ 
9110865650

ತರಬೇತಿಯಲ್ಲಿ ಕಲಿಸುವ ವಿಷಯಗಳು:: 
1. ಹೈನುರಾಸುಗಳ ತಳಿಗಳು (Dairy breeds),ಕುರಿ ತಳಿಗಳು(Sheep breeds)
2. ರೋಗಗಳು ಮತ್ತು ಅದರ ಲಕ್ಷಣಗಳು(Disease and their symptoms)
3. ರೋಗಗಳನ್ನು ತಡೆಗಟ್ಟುವ ಕ್ರಮಗಳು(controlling measures)
4. ಕೃತಕ ಗರ್ಭಧಾರಣೆ (Artificial Insemination)
5. ಮೇವಿನ ವಿಷಯಗಳು(Fodder)
6. ಎರೆಹುಳು ಗೊಬ್ಬರ ತಯಾರಿಕೆ (Vermicompost)
7. ಎರೆಹುಳು ನಿರ್ವಹಣೆ(Vermicompost management)
8. ಸಾವಯುವ ಕೃಷಿ ಪದ್ಧತಿಯ ಅರಿವು (Importantance of organic farming)
9. ಸಮಯದ ನಿರ್ವಹಣೆ, ಸ್ವ ಉದ್ಯೋಗದ ಮಹತ್ವ, ಸಂವಹನ ಕೌಶಲ್ಯ, ಬ್ಯಾಂಕಿಂಗ್ ವಿಷಯ ಮತ್ತು ಇನ್ನೂ ಇತರೆ ವಿಷಯಗಳ ಬಗ್ಗೆ ತಿಳುವಳಿಕೆ ನೀಡಲಾಗುವುದು.(Bank and subsidy schemes) ಇನ್ನು ಇತರೆ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು 

 ಆಸಕ್ತರು ಕೂಡಲೇ ಕೆಳಗಡೆ ನಮೂದಿಸಿದ ಮೊಬೈಲ್ ನಂಬರ್ ಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಿ 
8660219375

]]>
Wed, 09 Apr 2025 06:24:27 +0530 shivuagrico
Fid based bele parihara&ಫ್ರೂಟ್ಸ್ ತಂತ್ರಾಂಶದಲ್ಲಿರುವ ಶೇಕಡಾ 75% ರೈತರಿಗೆ ಮಾತ್ರ ಬೆಳೆ ಪರಿಹಾರ, ತಂತ್ರಾಂಶದಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ https://krushirushi.in/Fid-based-bele-parihara-201- https://krushirushi.in/Fid-based-bele-parihara-201- Fid based bele parihara-ಫ್ರೂಟ್ಸ್ ತಂತ್ರಾಂಶದಲ್ಲಿರುವ ಶೇಕಡಾ 75% ರೈತರಿಗೆ ಮಾತ್ರ ಬೆಳೆ ಪರಿಹಾರ, ತಂತ್ರಾಂಶದಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಬೆಳೆ ಪರಿಹಾರದಲ್ಲಿ(Bele parihara) ಬೆಳೆ ಸಮೀಕ್ಷೆ(crop survey) ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ(Fruits portal) ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ(crop loss compensation)ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ(DBT) ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2024-25 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್(Survey number) ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್‍ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.


ಬೆಳೆಹಾನಿ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/FarmerDeclarationReport.aspx

 

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ ವಿಕ್ಷಿಸು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ FID ಇರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಸಿಗಲಿದೆ


FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?


ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.

 ಏನಿದು ಫ್ರೂಟ್ಸ್ ನಂಬರ್


 ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.

 ನೋಂದಣಿ ಹೇಗೆ?


 ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್‍ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.

 ಏಕೆ ನೋಂದಾಯಿಸಬೇಕು?


 ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್  ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ


ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.

ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು

]]>
Wed, 09 Apr 2025 05:37:19 +0530 shivuagrico
ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ&Input subsidy for croploss https://krushirushi.in/Input-subsidy-for-crop-loss-2010 https://krushirushi.in/Input-subsidy-for-crop-loss-2010 Input subsidy for croploss-ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.


ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್‌ ಸಬ್ಸಿಡಿ ರೈತರ ಬ್ಯಾಂಕ್‌ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Tue, 08 Apr 2025 19:46:41 +0530 shivuagrico
Puc result 2025&ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟ,ನಿಮ್ಮ ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್ https://krushirushi.in/Puc-result-2025 https://krushirushi.in/Puc-result-2025 Puc result 2025-ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟ,ನಿಮ್ಮ ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in  ಜಾಲತಾಣದಲ್ಲಿ ದಿನಾಂಕ: 08/04/2025 ರ ಮಧ್ಯಾಹ್ನ 12.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ. 

ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://karresults.nic.in 

ನಂತರ ನಿಮ್ಮ Registration ನಂಬರ್ ಹಾಕಿ,Subject  Select ಮಾಡಿ Submit ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಫಲಿತಾಂಶ ದೊರೆಯಲಿದೆ

 

2nd puc result 2025 website

gov

karresults.nic.in2025

karresults.nic.in or

2nd puc result 2025 karnataka link

karresults. nic. in 2025

pue.karnataka.gov.in

kea result 2025

kseeb 2nd puc result 2025

when was 2nd puc result

12 puc result

2nd pu result 2025

12 puc result 2025 karnataka

2nd puc result date 2025

karnataka 2nd puc results 2025

karresults-nic

karresults-nic-in sslc results

2nd puc 2025 result

karresults.nic.in, kseab.karnataka.gov.in

2025 2nd puc result date

pu results

puc 2 result 2025 karnataka

when 2nd puc result 2025

2nd puc result website

sslc result 2025 date in karnataka

karresult.nic.in 2025

karnataka 2nd puc result 2025 date

when is 2nd puc result 2025

kseab.karnataka.gov.in or karresults.nic.in

karnataka 2nd puc result 2025 website

karresults.nic.in or kseab.karnataka.gov.in

when is 2nd puc result

karresults.nic in

kseeb.kar.nic.in 2025

2nd puc result date

2nd puc result karnataka

https //karresults.nic.in 2024

karresults.nic.in and kseab.karnataka.gov.in.

2puc results 2025 karnataka

karresults-nic-in 2025 puc

https karresults-nic-in

karresults-nic-in 2025 1st puc

karresults nic in puc results 2025

karnataka.gov.in puc

https karresults nic in 2024 2nd puc

2nd puc karnataka result

karresults-nic-in 2025

karresults.nic.in 2nd puc 2025

2nd puc result 2025

https //karresults.nic.in 2025

2nd puc result 2025 link karnataka

kseab.karnataka.gov.in puc

karresults.nic.in

karresults

puc result 2025

www.karresults.nic.in 2025

karresults.nic.in 2025

kseab karnataka gov in 2025

puc result 2025 karnataka

karresults nic in puc

puc result

karresults-nic-in 2025 2nd puc

2nd puc result 2025 link

karnataka 2nd puc result 2025

kseab.karnataka.gov.in

2puc results 2025

second puc result 2025

2nd puc result

karresults nic in 2025 puc results

12 puc result 2025

https //karresults.nic.in

kar results.nic.in

karresults nic in

2nd puc result 2025 karnataka

www.kar.nic.in 2025

kseab

karresults.nic.in.

krresults.nic.in 2025

2nd puc result link

kseeb karnataka gov in

karresults.nic.in or kseab.karnataka.gov.in/english

kseeb

kseeb 2nd puc result

karresults nic karnataka 2nd puc results

https //kseab.karnataka.gov.in login

karresults nic in 2025

2nd puc result 2025 date and time

karnataka 2nd puc results

2nd puc results

karresults.nic

2nd puc result 2025 date

karresults-nic-in 2025 puc results

puc result 2025 link

https karresults nic in 2025

puc result 2025 karnataka link

karnataka 2nd puc result

www.karresults.nic.in

result of 2nd puc 2025

2 nd pu result

karresults.nic.in and kseab.karnataka.gov.in

karnataka examination result 2025

2puc results 2025 date

kseab.karnataka.gov.in/english

2nd puc result link 2025

puc results

karresults.nic.in or kseab.karnataka.gov.in/english.

karresults-nic-in 2024

karesults.nic.in 2025

puc

pu result 2025

kseab.karnataka.gov.in.

how to check 2nd puc result

kar.results.nic.in 2025

2nd pu result

kseeb-kar-nic-in

kar results.nic.in 2025

karnataka

karresults.nic.in,

https karresults-nic-in 2025

karnataka 2nd puc result 2025 link

kseab.karnataka.gov.in 2025

karresults.nic.in.2025

karnataka school examination and assessment board

karresults nic in 2025 link

kseab.karnataka.gov.in puc 2024-25

2nd puc results 2025

karresults. nic. in

karresults.nic.in 2nd puc

kar.nic.in 2025

karnataka puc results 2025 date

kar results

second puc result 2025 karnataka

karresult.nic.in

puc result 2025 date

karnataka puc result 2025

pu results 2025 karnataka

kseab.karnataka.gov.in/english.

2puc results

when is 2nd puc exam 2025

@karresults.nic.in

kseab karnataka gov in

kseeb.karnataka.gov.in

2nd puc result 2024

kar results nic in

live

karnataka puc result

12 puc result 2025 link

2puc result

karresults.nic.

2025 2nd puc result

2nd puc result 2025 time

karresults.nic.in:

karresults.nic.in 2025 puc results

https karresults-nic-in 2023

karresults nic in 2025 sslc results

karresults.nic.in 2025 puc results date

when is 2nd puc result 2025 in karnataka

puc 2 result 2025

karresults.nic.in. 2025

results

second puc result 2025 link

2puc results 2025 date karnataka

https karresults nic in 2025 2nd puc

puc results 2025

karnataka result 2nd puc 2025

2 puc result

karnic puc result 2025

ii puc results 2025

pu result

karnataka result

2nd puc

2nd puc result 2025 kannada

karresults.nic.in 2nd puc 2024

karresults.nic.in 2020 puc results date

when 2nd puc result 2025?

karnataka 2nd puc result 2025 check online

2nd puc result 2025 link karnataka online

nic

kar result

karnataka examination result

second puc result

puc result 2024

2nd year result

karnataka puc results 2025

2nd pu results

how to check 2nd puc result 2025

12th result date 2025 karnataka

kar result.nic.in

kseeb result 2025

puc result 2025 karnataka date

https//karresults.nic.in

www-karresults-nic-in 2025

puc result link

karresults nic

karnataka results

2nd pu result link

2pu result 2025

https//karresults.nic.in 2025

karresults.nic.in and pue.kar.nic.in

www.karresults.nic.in 2024

@karresults.nic.in:

second puc result 2025 date

karresults-nic-in 2025 link

karnataka result 2025

2nd puc result link 2025 karnataka

]]>
Mon, 07 Apr 2025 20:34:25 +0530 shivuagrico
Gruhalakshmi list&ಈ ಪಟ್ಟಿಯಲ್ಲಿರುವವರಿಗೆ ಜಮಾ ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ,ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಚೆಕ್ ಮಾಡಿ https://krushirushi.in/Gruhalakshmi-list-2008 https://krushirushi.in/Gruhalakshmi-list-2008 Gruhalakshmi list-ಈ ಪಟ್ಟಿಯಲ್ಲಿರುವವರಿಗೆ ಜಮಾ ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ

ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಈಗಾಗಲೇ ಘಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣ ಕೂಡ ಬಿಡುಗಡೆಯಾಗಿದ್ದು, ಶೀಘ್ರವೇ ಜಮೆಯಾಗಲಿದೆ.” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ.

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Mon, 07 Apr 2025 19:33:09 +0530 shivuagrico
Crop loss and crop insurance&ಬೆಳೆವಿಮೆ ಹಾಗೂ ಬೆಳೆಹಾನಿ ಬೇರೆ ಬೇರೆ, ಎರಡನ್ನೂ ಹೀಗೆ ಚೆಕ್ ಮಾಡಿ https://krushirushi.in/Crop-loss-and-crop-insurance-2007 https://krushirushi.in/Crop-loss-and-crop-insurance-2007 Crop loss and crop insurance-ಬೆಳೆವಿಮೆ ಹಾಗೂ ಬೆಳೆಹಾನಿ ಬೇರೆ ಬೇರೆ, ಎರಡನ್ನೂ ಹೀಗೆ ಚೆಕ್ ಮಾಡಿ

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂ

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Sun, 06 Apr 2025 23:46:35 +0530 shivuagrico
Gram one franchise&ನಿಮ್ಮ ಊರಿನಲ್ಲಿ ಹೊಸ ಗ್ರಾಮ ಒನ್ ಸ್ಥಾಪನೆಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ https://krushirushi.in/Gram-one-franchise-2005 https://krushirushi.in/Gram-one-franchise-2005 Gram one franchise-ನಿಮ್ಮ ಊರಿನಲ್ಲಿ ಹೊಸ ಗ್ರಾಮ ಒನ್ ಸ್ಥಾಪನೆಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್(Gram one online application) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಟಾನಗೊಳಿಸುತ್ತಿದ್ದು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆ.15 ಕಡೆಯ ದಿನವಾಗಿದ್ದು ಆಸಕ್ತಿವುಳ್ಳವರು ಅರ್ಜಿಗಳನ್ನು https://www.karnatakaone.gov.in/Public/GramOneFrachiseeTerms  ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು ಹಾಗೂ ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಗ್ರಾಮಓನ್ ನಲ್ಲಿ ಸಿಗುವ ಸೇವೆಗಳು ಹಾಗೂ ಅದಕ್ಕೆ ಬೇಕಾದ ದಾಖಲೆಗಳ ಪಟ್ಟಿಯನ್ನು ಈ ಕೆಳಗಿನ PDF ಮೂಲಕ ಡೌನ್ಲೋಡ್ ಮಾಡಿಕೊಳ್ಳಿ

]]>
Sun, 06 Apr 2025 17:03:34 +0530 shivuagrico
Dairy farming&2 ಹಸು,2 ಎಮ್ಮೆ ಖರೀದಿಗೆ 1.25 ಲಕ್ಷ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ https://krushirushi.in/Dairy-farming-2006 https://krushirushi.in/Dairy-farming-2006 Dairy farming-2 ಹಸು,2 ಎಮ್ಮೆ ಖರೀದಿಗೆ 1.25 ಲಕ್ಷ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

 ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ ಹಸುಗಳಿಗೆ ಘಟಕ ವೆಚ್ಚದ ಶೇ.50 ರಷ್ಟು ಅಥವಾ ಗರಿಷ್ಟ 1.25 ಲಕ್ಷ ರೂ. ಸಹಾಯಧನ 


  • * ಎಸ್‌ಸಿ/ಎಸ್‌ಟಿ ರೈತರ ಜಮೀನುಗಳಿಗೆ ಶಾಶ್ವತ ನೀರಾವರಿ ಒದಗಿಸಲು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ 4,923 ಕೊಳವೆ ಬಾವಿಗಳನ್ನು ಕೊರೆಸಲು ಅನುಮತಿ


ಉಚಿತ ಹಾಲು ಕರೆಯುವ ಯಂತ್ರ,ರಬ್ಬರ್ ಮ್ಯಾಟ್,ಸೈಲೆಜ್ ಬ್ಯಾಗ್ ವಿತರಣೆಗೆ ಅರ್ಜಿ ಆಹ್ವಾನ-Free milking machine,cow mat,silage bag


2024-25 ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿಯಲ್ಲಿ ಹಾಲು ಕರೆಯುವ ಯಂತ್ರ(Milking machine), ರಬ್ಬರ್ ನೆಲಹಾಸು(Rubber mat) ಹಾಗೂ ಸೈಲೇಜ್ ಬ್ಯಾಗ್ಗಳನ್ನು(Silage bag) ವಿತರಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ(Vetarnary department)ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಾಲು ಕರೆಯುವ ಯಂತ್ರ  ತಲಾ 1 ರಂತೆ, ರಬ್ಬರ್ ನೆಲಹಾಸು ತಲಾ 2 ರಂತೆ ಹಾಗೂ ಸೈಲೇಜ್ ಬ್ಯಾಗ್ ತಲಾ 100 ಕೆಜಿ ಸಾಮರ್ಥ್ಯದ 1 ಹಾಗೂ 500 ಕೆಜಿ ಸಾಮರ್ಥ್ಯದ 1 ಬ್ಯಾಗ್ ಅನ್ನು ನೀಡಲಾಗುತ್ತದೆ. ಸದರಿ ಫಲಾನುಭವಿಗಳ ಆಯ್ಕೆಯಲ್ಲಿ ರೋಸ್ಟರ್ ನಿಯಾಮಾನುಸಾರದ ಕ್ರಮ ವಹಿಸಲಿದ್ದು, ಆಸಕ್ತರು ತಮ್ಮ ಸ್ಥಳೀಯ ಪಶುವೈದ್ಯಾಧಿಕಾರಿಗಳಿಂದ/ಮುಖ್ಯ ಪಶುವೈದ್ಯಾಧಿಕಾರಿಗಳು ಇವರಿಂದ ಅರ್ಜಿ ನಮೂನೆಯನ್ನು ಪಡೆದು ಎಲ್ಲಾ ದಾಖಲಾತಿಗಳೊಂದಿಗೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮುಖ್ಯ ಪಶು ವೈದ್ಯಾಧಿಕಾರಿಗಳ ಈ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming 

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು(Cow) ಅಥವಾ ಎಮ್ಮೆ(Buffelow) ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್‌ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.


ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Vetarnary department schemes 2025-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?

ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ


ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.

ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.


ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು

ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.


ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.


ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.

ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.


ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.

ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.


ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahvs.karnataka.gov.in/info-2/Schemes+&+Benefits/kn

National livestock mission 2024-ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆ,ಕುರಿ,ಕೋಳಿ,ಮೇಕೆ,ಹಂದಿ ಸಾಕಾಣೆಕೆಗೆ ಅರ್ಜಿ ಆಹ್ವಾನ

ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ, ಮೇಕೆ, ಹಂದಿ ಸಾಕಾಣಿಕೆ ಮತ್ತು ರಸಮೇವು ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.

National livestock mission 


ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ

(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)


 ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.


 ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.

ಅವಶ್ಯಕ ದಾಖಲಾತಿಗಳು :-

1)ಆಧಾರ,

2)ಪಹಣಿ ಪತ್ರ

3)ಬ್ಯಾಂಕ್‌ಖಾತೆ ಸಂಖ್ಯೆ,

ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು

4)ಭಾವ ಚಿತ್ರ.



ಕ್ರ.ಸಂ 

ಘಟಕ 

ಸೌಲಭ್ಯಗಳ ವಿವರ

 

 ಹೈನುಗಾರಿಕೆ 

 

1

ಮಿಶ್ರತಳಿ ದನಗಳ ನಿರ್ವಹಣೆ (1+1)

ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ

 

ಆ. ಸುಧಾರಿತ ಎಮ್ಮೆಗಳ ನಿರ್ವಹಣೆ 
 (1+1)

ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ

 

 ಕುರಿ ಸಾಕಾಣಿಕೆ 

 

2

ಕುರಿಗಳ ನಿರ್ವಹಣೆ (10+01)

 ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ

 

ಕುರಿಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ

 

ಟಗರುಗಳ ನಿರ್ವಹಣೆ (10)

ರೂ. 13,000 ರಂತೆ ಸಾಲ ಸೌಲಭ್ಯ

 

 ಟಗರುಗಳ ನಿರ್ವಹಣೆ (20)

ರೂ. 26,000 ರಂತೆ ಸಾಲ ಸೌಲಭ್ಯ

 

ಮೇಕೆ ಸಾಕಾಣಿಕೆ 

 

3

ಮೇಕೆಗಳ ನಿರ್ವಹಣೆ (10+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ

 

ಮೇಕೆಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ

4

ಹಂದಿ ಸಾಕಾಣಿಕೆ (10)

ರೂ,60,000 ರಂತೆ ಸಾಲ ಸೌಲಭ್ಯ

 

           ಕೋಳಿ ಸಾಕಾಣಿಕೆ 

 

5

ಮಾಂಸದ ಕೋಳಿ ಸಾಕಾಣಿಕೆ

2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ

 

 ಮೊಟ್ಟೆ ಕೋಳಿ ಸಾಕಾಣಿಕೆ

1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.

ಈ ಮಾಹಿತಿ ನಿಮಗೆ ಉಪಯೋಗವಾಗಿದ್ದರೆ ಬೇರೆಯವರಿಗೂ ಹಂಚಿಕೊಳ್ಳಿ ಧನ್ಯವಾದಗಳು

]]>
Sun, 06 Apr 2025 05:48:08 +0530 shivuagrico
Gram Panchayati election&ಗ್ರಾಮಪಂಚಾಯತಿ ಚುನಾವಣೆ ಘೋಷಣೆ,ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ https://krushirushi.in/Gram-Panchayati-election-2003e https://krushirushi.in/Gram-Panchayati-election-2003e Gram Panchayati election-ಗ್ರಾಮಪಂಚಾಯತಿ ಚುನಾವಣೆ ಘೋಷಣೆ,ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ

ರಾಜ್ಯದ 222 ಗ್ರಾಮ ಪಂಚಾಯಿತಿ ಉಪ ಚುನಾವಣೆ ದಿನಾಂಕ ಘೋಷಣೆ: ಮೇ 11ರಂದು ಮತದಾನ, 14ರಂದು ಫಲಿತಾಂಶ ಪ್ರಕಟ 


ರಾಜ್ಯದ 222 ಗ್ರಾಮ ಪಂಚಾಯಿತಿಗಳ 260 ಸ್ಥಾನಗಳಿಗೆ ಉಪಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ. 
ಏಪ್ರಿಲ್ 22 ರಂದು ರಾಜ್ಯ ಚುನಾವಣಾ ಆಯೋಗದಿಂದ ಅಧಿಸೂಚನೆ ಪ್ರಕಟಿಸಲಾಗುವುದು. ಮೇ 11ರಂದು ಮತದಾನ, ಮೇ 14ರಂದು ಫಲಿತಾಂಶ ಪ್ರಕಟವಾಗಲಿದೆ. 
ವಿವಿಧ ಕಾರಣಗಳಿಂದಾಗಿ ತೆರವಾಗಿರುವ 222 ಗ್ರಾಮ ಪಂಚಾಯಿತಿಗಳ 260 ಸ್ಥಾನಗಳಿಗೆ ಉಪಚುನಾವಣೆ ನಡೆಸಲಾಗುವುದು. 

Voter ID-ನಿಮ್ಮ ಮೊಬೈಲ್ ನಲ್ಲೇ  ಬದಲಾದ ಮೊಟರ್ ಐಡಿ ಡೌನ್ಲೊಡ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-205 

ಇದಕ್ಕಾಗಿ ಚುನಾವಣಾ ಆಯೋಗದಿಂದ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೇ 11ರಂದು ಮತದಾನ, ಮೇ 14ರಂದು ಫಲಿತಾಂಶ ಪ್ರಕಟಿಸಲಾಗುವುದು. ಇದಕ್ಕೆ ಪೂರ್ವಭಾವಿಯಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಏಪ್ರಿಲ್ 22ರಂದು ಅಧಿಸೂಚನೆ ಹೊರಡಿಸಲಾಗುವುದು ಎನ್ನಲಾಗಿದೆ.

.Polling booth-ನಿಮ್ಮ ಮತಗಟ್ಟೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-207 

ಕರ್ನಾಟಕದ ಮತದಾರರ ವಿವರ (Karnataka Voter Details)ಕರ್ನಾಟಕ ಒಟ್ಟು 5.3 ಕೋಟಿ ಮತದಾರರನ್ನು ಹೊಂದಿದ್ದು, ಇದರಲ್ಲಿ 2.62 ಕೋಟಿ ಪುರುಷ ಮತದಾರರು ಇದ್ದರೆ, 2.59 ಕೋಟಿ ಮಹಿಳಾ ಮತದಾರರು ಇದ್ದಾರೆ. ಮತದಾರರ ಲಿಂಗಾನುಪಾತ ಗಮನಿಸಿದರೆ ಪ್ರತಿ ಸಾವಿರ ಪುರುಷ ಮತದಾರರಿಗೆ 988 ಮಹಿಳಾ ಮತದಾರರಿದ್ದಾರೆ.

Voter list-ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ceo.karnataka.gov.in/draftroll_2023/ 

ನಂತರ ನಿಮ್ಮ ಜಿಲ್ಲೆಯನ್ನು ಕ್ಲಿಕ್ ಮಾಡಿ

ನಂತರ ನೀವು ಮತ ಹಾಕುವ ಬೂತ ಮೇಲೆ ಕ್ಲಿಕ್ ಮಾಡಿ

ಕೆಳಗೆ ಕಾಣುವ captch ಮೇಲೆ ಕ್ಲಿಕ್ ಮಾಡಿ Download ಮೇಲೆ ಕ್ಲಿಕ್ ಮಾಡಿದರೆ,ನಿಮ್ಮ ಬೂತನಲ್ಲಿರುವ ಎಲ್ಲಾ ಮತದಾರರ ಪಟ್ಟಿ ಸಿಗುತ್ತದೆ. ಇದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ.

ನಿಮ್ಮ ಹೆಸರು ಇಲ್ಲದಿದ್ದರೆ ಕೂಡಲೆ ನಿಮ್ಮ ಗ್ರಾಮ ಲೆಕ್ಕಾಧಿಕಾರಿಯನ್ನು ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಸೇರಿಸಿ

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.      

http://krushirushi.in/Krushi-Rushi-80


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ  

]]>
Sat, 05 Apr 2025 08:12:05 +0530 shivuagrico
Sprinkler set&ರೈತರಿಗೆ ಗುಡ್ ನ್ಯೂಸ್,ಸ್ಪ್ರಿಂಕ್ಲರ್ ಸೆಟ್ ವಿತರಣೆಯಲ್ಲಿ ಮಹತ್ವದ ಬದಲಾವಣೆ https://krushirushi.in/Sprinkler-set-2003 https://krushirushi.in/Sprinkler-set-2003 Sprinkler set-ರೈತರಿಗೆ ಗುಡ್ ನ್ಯೂಸ್,ಸ್ಪ್ರಿಂಕ್ಲರ್ ಸೆಟ್ ವಿತರಣೆಯಲ್ಲಿ ಮಹತ್ವದ ಬದಲಾವಣೆ


ಸೂಕ್ಷ್ಮ (ತುಂತುರು) ನೀರಾವರಿಗೆ(Micro irrigation)ಸಹಾಯಧನದಡಿ ಪರಿಕರಗಳನ್ನು ಪಡೆಯಲಿದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿ, ಎಲ್ಲ ವರ್ಗದ ರೈತರಿಗೆ ಸಬ್ಸಿಡಿ ನವೀಕರಣ ಸೌಲಭ್ಯ ವಿಸ್ತರಿಸಿ ಆದೇಶಿಸಿದೆ. ಪರಿಶಿಷ್ಟ ಜಾತಿ, ಪಂಗಡಗಳ ರೈತ ಫಲಾನುಭವಿಗಳು ಏಳು ವರ್ಷಗಳ ನಂತರ ಅದೇ ಜಮೀನಿಗೆ ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.

ಇದೀಗ ಇತರ ವರ್ಗಗಳ ರೈತರಿಗೂ ಸರ್ಕಾರ ವಿಸ್ತರಿಸಿದೆ. ಈ ಹಿಂದೆ ಇತರ ವರ್ಗದ ರೈತರಿಗೆ ಒಮ್ಮೆ ಮಾತ್ರ ಒಂದು ನಿರ್ದಿಷ್ಟ ಜಮೀನಿಗೆ ಹನಿ ನೀರಾವರಿ(Drip irrigation), ತುಂತುರು ನೀರಾವರಿ(Sprinkler irrigation)ಘಟಕ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಸಚಿವರ ಪ್ರಯತ್ನ ಫಲಪ್ರದ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ರಾಜ್ಯ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಎಲ್ಲ ಜಿಲ್ಲೆಗಳ ರೈತರು ಇತರೆ ವರ್ಗಗಳ ರೈತರಿಗೆ ವಿಧಿಸಿರುವ ನಿರ್ಬಂಧ ಸಡಿಲಿಸಲು ಪದೇಪದೆ ವಿನಂತಿಸಿದ್ದರು. ಈ ಮನವಿಯನ್ನು ಎನ್.ಚಲುವರಾಯಸ್ವಾಮಿ ಗಂಭೀರವಾಗಿ ಪರಿಗಣಿಸಿದ್ದರು. ನಿರಂತರ ಪ್ರಯತ್ನ ಕೊನೆಗೂ ಫಲಪ್ರದವಾಗಿದೆ. ಇತರೆ ವರ್ಗಗಳ ರೈತರ ಮೇಲಿನ ನಿರ್ಬಂಧ ಸಡಿಲಿಸಿ, ಏಳು ವರ್ಷಗಳ ನಂತರ ಮತ್ತದೇ ಜಮೀನಿಗೆ ಸಬ್ಸಿಡಿ ನವೀಕರಣದ ಅವಕಾಶದ ಆದೇಶ ಹೊರಬಿದ್ದಿದೆ. ಕೇಂದ್ರ ಸರ್ಕಾರವು ರಾಷ್ಟ್ರೀಯ ಕೃಷಿ ಯೋಜನೆಯಡಿ ಒಂಭತ್ತು ಘಟಕಗಳನ್ನು ಸೇರ್ಪಡೆಗೊಳಿಸಿ ಪ್ರಧಾನಮಂತ್ರಿ ರಾಷ್ಟ್ರೀಯ ವಿಕಾಸ ಯೋಜನೆ (ಪಿಎಂ-ಆರ್​ಕೆವಿವೈ) ಎಂದು ಮರು ನಾಮಕರಣ ಮಾಡಿದೆ. ಇದರ ವ್ಯಾಪ್ತಿಗೆ ಒಳಪಡಿಸುವಂತೆ ರೈತರಿಗೆ ಸೌಲಭ್ಯ ಪಡೆಯಲು ಅವಕಾಶ ನೀಡಿ ಆದೇಶಿಸಿದೆ.

2.60 ಲಕ್ಷ ರೈತರಿಗೆ ಅನುಕೂಲ: ಪಿಎಂಕೆಎಸ್​ಐ(PMKSY)ಮತ್ತು ಪಿಎಂಎಂಎಸ್(PMMS) ಯೋಜನೆಯಡಿ ಸೂಕ್ಷ್ಮ ನೀರಾವರಿ ಯೋಜನೆಗೆ 274 ಕೋಟಿ ರೂ. ಮೀಸಲಿರಿಸಲಾಗಿತ್ತು. ಇದರಿಂದ 2.60 ಲಕ್ಷ ರೈತರಿಗೆ ಅನುಕೂಲ ತಲುಪಲಿದೆ. ಅಲ್ಲದೆ ಟಾಪ್​ಅಪ್ ಯೋಜನೆಯಡಿ ಸೂಕ್ಷ್ಮ ನೀರಾವರಿ ಪರಿಕರಗಳಿಗೆ ಆರ್ಥಿಕ ನೆರವು ಒದಗಿಸಲು 252 ಕೋಟಿ ರೂ. ಅನುದಾನವನ್ನು ನೀಡಲಾಗಿದೆ. ಸುಸ್ಥಿರ ಕೃಷಿ ಅಭಿವೃದ್ಧಿ, ಯಾಂತ್ರೀಕರಣ ಮತ್ತು ಡಿಜಿಟಿಲೀಕರಣ, ಪ್ರತಿ ಹನಿ ನೀರು ಪರಿಣಾಮಕಾರಿ ಬಳಕೆ ಮುಂತಾದ ಉದ್ದೇಶಗಳನ್ನು ಪಿಎಂ-ಆರ್​ಕೆವಿವೈ ಒಳಗೊಂಡಿದೆ.

ವಿಸ್ತೃತ ಯೋಜನಾ ವರದಿ, ಮಣ್ಣಿನ ಆರೋಗ್ಯ ನಿರ್ವಹಣೆ, ಮಳೆಯಾಶ್ರಿತ ಪ್ರದೇಶದ ಅಭಿವೃದ್ಧಿ, ಕೃಷಿ ಅರಣ್ಯ, ಪಾರಂಪರಿಕ ಕೃಷಿ, ಕೃಷಿ ಯಾಂತ್ರೀಕರಣ, ಪ್ರತಿ ಹನಿಗೂ ಹೆಚ್ಚಿನ ಬೆಳೆ, ಬೆಳೆ ಉಳಿಕೆ ನಿರ್ವಹಣೆ, ಬೆಳೆ ವೈವಿಧ್ಯಕರಣ, ಕೃಷಿ ನವೋದ್ಯಮಗಳಿಗೆ ವೇಗವರ್ಧಕ ನಿಧಿ ಘಟಕಗಳನ್ನು ಈ ಯೋಜನೆಯಡಿ ವಿಲೀನಗೊಳಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 60:40 ಅನುಪಾತದಡಿ ಯೋಜನಾ ವೆಚ್ಚವನ್ನು ಭರಿಸಲಿದೆ. ಸೂಕ್ಷ್ಮ ನೀರಾವರಿಗೆ ಪ್ರೋತ್ಸಾಹಿಸಲೆಂದು ರೈತರಿಗೆ ಸಬ್ಸಿಡಿ ಸೌಲಭ್ಯ ಕಲ್ಪಿಸಲಾಗಿದೆ.

ಪಿಎಂ-ಆರ್​ಕೆವಿವೈಯಡಿ(PM-RKVY) 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರ 582.24 ಕೋಟಿ ರೂ. ಆರಂಭಿಕ ಹಂಚಿಕೆ ಮಾಡಿತ್ತು. ನಂತರ 761.89 ಕೋಟಿ ರೂ.ಗಳಿಗೆ ಏರಿಸಿದ್ದು, ಹೆಚ್ಚುವರಿ ಮೊತ್ತದ ಪೈಕಿ ಕೃಷಿ ಯಾಂತ್ರೀಕರಣ ಮತ್ತು ಉಳಿಕೆ ಬೆಳೆ ನಿರ್ವಹಣೆಗೆ 120 ಕೋಟಿ ರೂ., ಮಣ್ಣಿನ ಆರೋಗ್ಯ- 12 ಕೋಟಿ ರೂ., ವಿಸ್ತೃತ ಯೋಜನಾ ವರದಿ ಘಟಕಕ್ಕೆ 46.65 ಕೋಟಿ ರೂ. ಸೇರಿತ್ತು. ಯೋಜನೆಯಡಿ 526.75 ಕೋಟಿ ರೂ., 2024-25ನೇ ವರ್ಷಕ್ಕೆ ಹಂಚಿಕೆಯಾದ ಮೊತ್ತದಲ್ಲಿ 326.02 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಸೂಕ್ಷ್ಮ ನೀರಾವರಿಗೆ ಸಬ್ಸಿಡಿ ಸೌಲಭ್ಯವೆಷ್ಟು?

]]>
Sat, 05 Apr 2025 07:34:55 +0530 shivuagrico
Beleparihar status&ಆಧಾರ್ ನಂಬರ್,ಸರ್ವೆ ನಂಬರ್,ಎಫ್ ಐಡಿ,ಮೊಬೈಲ್ ನಂಬರ್ ಹಾಕಿ ಬೆಳೆ ಪರಿಹಾರ ಚೆಕ್ ಮಾಡಿ https://krushirushi.in/Beleparihara-status-2002 https://krushirushi.in/Beleparihara-status-2002 Beleparihar status-ಆಧಾರ್ ನಂಬರ್,ಸರ್ವೆ ನಂಬರ್,ಎಫ್ ಐಡಿ,ಮೊಬೈಲ್ ನಂಬರ್ ಹಾಕಿ ಬೆಳೆ ಪರಿಹಾರ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Aadhaar number/ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ Aadhaar number/ಆಧಾರ್ ಸಂಖ್ಯೆ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿ

 ಈ ಕೆಳಗಿನಂತೆ ನಿಮ್ಮ ಆಧಾರ್ ನಂಬರ್ ನ ಕೊನೆಯ 4 ಸಂಖ್ಯೆ ಒಂದೆೇ ಇರುವ ಎಲ್ಲಾ ರೈತರ ಪಟ್ಟಿ ಸಿಗಲಿದೆ.ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಲು Search ಬಾಕ್ಸನಲ್ಲಿ ನಿಮ್ಮ ಹೆಸರು ಹಾಕಿ Search ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಬೆಳೆಹಾನಿ ಪರಿಹಾರ ಜಮಾ ಮಾಹಿತಿ ಸಿಗಲಿದೆ.

FID based Belehani parihara-ನಿಮ್ಮ FID ನಂಬರ್ ಹಾಕಿ ನಿಮಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ

ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx 

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.

ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ

Mobile number based croploss compensation-ನಿಮ್ಮ ಮೊಬೈಲ್ ನಂಬರ್ ಹಾಕಿ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ


ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ

ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ

ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ

Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.

Survey number based croploss compensation-ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು  ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Survey number/ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ


ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,ಸರ್ವೆ ನಂಬರ್,ಸರ್ ನಾಕ್,ಹಿಸ್ಸಾ ನಂಬರ್ select ಮಾಡಿ Get data/ಪಡೆಯಿರಿ ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ.

]]>
Sat, 05 Apr 2025 05:43:29 +0530 shivuagrico
Arecanut rate&55 ಸಾವಿರದ ಗಡಿಯತ್ತ ಅಡಿಕೆ ರೇಟ್,ಇಲ್ಲಿದೆ ಕನಿಷ್ಟ ಗರಿಷ್ಟ ರೇಟ್ ಮಾಹಿತಿ https://krushirushi.in/Arecanut-rate-2001 https://krushirushi.in/Arecanut-rate-2001 Arecanut rate-55 ಸಾವಿರದ ಗಡಿಯತ್ತ ಅಡಿಕೆ ರೇಟ್,ಇಲ್ಲಿದೆ ಕನಿಷ್ಟ ಗರಿಷ್ಟ ರೇಟ್ ಮಾಹಿತಿ

 ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆದರವು (arecanut rate) ಭರ್ಜರಿ ಏರಿಕೆ ಕಂಡಿದೆ‌. 55 ಸಾವಿರ ಗಡಿಯತ್ತ ದರ ಏರಿಕೆಯಾಗುತ್ತಿದೆ. ಇಂದು (ಏ.4) ಗರಿಷ್ಠ ಬೆಲೆ 54,629 ರೂ.ಗೆ ಏರಿಕೆಯಾಗಿದೆ.

  • ಏ.4ರ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಪ್ರತಿ ಕ್ವಿಂಟಲ್ ದರ)
  • ಗರಿಷ್ಠ ಬೆಲೆ 54,629
  • ಕನಿಷ್ಠ ಬೆಲೆ 50,512
  • ಸರಾಸರಿ ಬೆಲೆ 53,130
  • ಬೆಟ್ಟೆ ಅಡಿಕೆ ದರ
  • ಗರಿಷ್ಠ ಬೆಲೆ 24,287
  • ಕನಿಷ್ಠ ಬೆಲೆ 20,786
  • ಸರಾಸರಿ ಬೆಲೆ 22,436

ಅಡಿಕೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ (Channagiri) ವಹಿವಾಟಿನಲ್ಲಿ ಏ.4ರಂದು ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 54,629. ಇದ್ದು, ಕನಿಷ್ಠ ಬೆಲೆ 50,512 ರೂ., ಸರಾಸರಿ ಬೆಲೆ 53,130 ರೂ.‌ಇದೆ.

ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಅದರಲ್ಲೂ ಏಪ್ರಿಲ್ ತಿಂಗಳಲ್ಲಿ ಇನ್ನಷ್ಟು ಬಿಸಿಲು ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬಿಸಿಲಿನ ತಾಪಮಾನ ಹೆಚ್ಚಳದಿಂದ ಅಡಿಕೆಗೆ ಹಲವು ರೋಗಗಳು ಕಾಣಿಸಿಕೊಳ್ಳುತ್ತಿವೆ.‌ ಹೀಗಾಗಿ ಅಡಿಕೆ ತೋಟಗಳ ರಕ್ಷಣೆಗೆ ರೈತರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ.

ಜನವರಿ ಕೊನೆಯಲ್ಲಿ 52 ಸಾವಿರ ಒಳಗೆ ಇದ್ದ ದರ, ಫೆಬ್ರವರಿಯಲ್ಲಿ ಮತ್ತೆ 53 ಸಾವಿರ ಗಡಿ ದಾಟಿತ್ತು. ಮಾರ್ಚ್ ಮೊದಲ ವಾರದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ತಿಂಗಳ ಕೊನೆಯಲ್ಲಿ ಮತ್ತೆ 53 ಸಾವಿರ ಗಡಿ ದಾಟಿತ್ತು. ಇದೀಗ ಏಪ್ರಿಲ್ ನಲ್ಲಿ 55 ಸಾವಿರ ಗಡಿಯತ್ತ ಸಾಗುತ್ತಿದೆ. 2023 ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಕಳೆದ ವರ್ಷ (2024) ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿತ್ತು.

]]>
Fri, 04 Apr 2025 19:57:29 +0530 shivuagrico
Karnataka rain alert&ವಾಯುಭಾರ ಕುಸಿತ,ಏಪ್ರೀಲ್ 11ರವರೆಗಿನ ಜಿಲ್ಲಾವಾರು ಮಳೆ ಮಾಹಿತಿ https://krushirushi.in/karnataka-rain-alert-2000 https://krushirushi.in/karnataka-rain-alert-2000 Karnataka rain alert-ವಾಯುಭಾರ ಕುಸಿತ,ಏಪ್ರೀಲ್ 11ರವರೆಗಿನ ಜಿಲ್ಲಾವಾರು ಮಳೆ ಮಾಹಿತಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಏಳು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಏಳು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಏಪ್ರಿಲ್ 6 ರಂದು ಕರಾವಳಿ ಕರ್ನಾಟಕದ ಕೆಲವೆಡೆ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಉತ್ತರ ಒಳ ಕರ್ನಾಟಕದಲ್ಲಿಯೂ ಮಳೆ,ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

 

ಬೆಂಗಳೂರು ಸೇರಿದಂತೆ ಎಲ್ಲೆಲ್ಲಿ ಮಳೆ?

ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ 40-50 kmph ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ 40-50 ಕಿಮೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ

ದಕ್ಷಿಣ ಒಳ ಕರ್ನಾಟಕ ಭಾಗದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ 30-40 kmph ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ 30-40 ಕಿ.ಮೀ ಗಾಳಿಯೊಂದಿಗೆ ಲಘು ಮಳೆ ಮಳೆಯಾಗುವ ಸಾಧ್ಯತೆಯಿದೆ.

ನಾಳೆಯ ಹವಾಮಾನ

ಏಪ್ರಿಲ್ 7ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ 30-40 kmph ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳ ಕರ್ನಾಟಕ ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ (30-40 kmph) ಗಾಳಿಯೊಂದಿಗೆ ಲಘು ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ ಇದೆ


ಮಂಗಳವಾರ ಏಪ್ರಿಲ್- 8

ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ ಧಾರವಾಡ, ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ ಇದೆ.
ದಕ್ಷಿಣ ಒಳ ಕರ್ನಾಟಕ:ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಲಘು ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ.

ಬುಧವಾರ ಎಲ್ಲೆಲ್ಲಿ ಮಳೆ?

ಏಪ್ರಿಲ್ 9 ರಂದು ಕರಾವಳಿ ಕರ್ನಾಟಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಅಂದೇ ಉತ್ತರ ಒಳ ಕರ್ನಾಟಕ: ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಧಾರವಾಡ, ಕಲಬುರ್ಗಿ, ಬಾಗಲಕೋಟೆ, ಬೆಳಗಾವಿ, ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ. ದಕ್ಷಿ ಣ ಒಳ ಕರ್ನಾಟಕದಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ.


ಏಪ್ರಿಲ್ 10-11 ರಂದು ಎಲ್ಲೆಲ್ಲಿ ಮಳೆ?

ಏಪ್ರಿಲ್10 ರಂದು ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕವಿಜಯಪುರ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 11ರಂದು ಕರಾವಳಿ ಕರ್ನಾಟಕ: ಕೆಲವೆಡೆ ಮಳೆಯಾಗುವ ಸಾಧ್ಯತೆ. ಉತ್ತರ ಒಳ ಕರ್ನಾಟಕ ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ. ದಕ್ಷಿಣ ಒಳ ಕರ್ನಾಟಕ: ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಎಲ್ಲಾ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.


12 ನೇ ಏಪ್ರಿಲ್

ಧಾರವಾಡ, ಬೆಳಗಾವಿ, ಹಾವೇರಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ.
ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ.

]]>
Fri, 04 Apr 2025 19:52:21 +0530 shivuagrico
Vasathi yojane&ಸರ್ವರಿಗೂ ಸೂರು ಯೋಜನೆಯಡಿ 42,345 ಮನೆ ಹಂಚಿಕೆ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ https://krushirushi.in/Vasathi-yojane-1998 https://krushirushi.in/Vasathi-yojane-1998 Vasathi yojane-ಸರ್ವರಿಗೂ ಸೂರು ಯೋಜನೆಯಡಿ 42,345 ಮನೆ ಹಂಚಿಕೆ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

ರಾಜ್ಯ ಸರ್ಕಾರ ವಸತಿ ರಹಿತರಿಗೆ ಗುಡ್ ನ್ಯೂಸ್ ನೀಡಿದ್ದು, ಈ ವರ್ಷ 2.30 ಲಕ್ಷ ಮನೆಗಳ ನಿರ್ಮಾಣ ಮಾಡುವುದಾಗಿ ಘೋಷಿಸಿದೆ.

ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 1.80 ಲಕ್ಷ ಮನೆಗಳು ಮಂಜೂರಾಗಿದ್ದು, ಮೊದಲ ಹಂತದಲ್ಲಿ 36,789, ಎರಡನೇ ಹಂತದಲ್ಲಿ 39,843 ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗಿದೆ.

ಉಳಿದ 1.30 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ 46 ಸಾವಿರ ಮನೆ ಸೇರಿ ಈ ವರ್ಷ 2.30 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವರಾದ ಜಮೀರ್ ಅಹಮದ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

 ಯೋಜನೆಯ ಹೆಸರು- ಪ್ರಧಾನ ಮಂತ್ರಿ ಆವಾಸ್ ( ಗ್ರಾಮೀಣ ಪ್ರದೇಶಗಳಲ್ಲಿ  ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ವಸತಿ ಕಲ್ಪಿಸುವ ಯೋಜನೆ)

 ಸಹಾಯಧನದ ಮೊತ್ತ

 ಎಸ್ ಸಿ ಎಸ್ ಟಿ
 ಕೇಂದ್ರದ ಪಾಲು -72,000
 ರಾಜ್ಯದ ಪಾಲು-78,000
 ಒಟ್ಟು -1,50,000

 ಸಾಮಾನ್ಯ ವರ್ಗದವರಿಗೆ
 ಕೇಂದ್ರದ ಪಾಲು-72,000
 ರಾಜ್ಯದ ಪಾಲು-48,000
 ಒಟ್ಟು -1,20,000

 ಫಲಾನುಭವಿಯ ಸ್ವಸಹಾಯವಂತಿಕೆ

ಎಲ್ಲಾ ವರ್ಗದ ಫಲಾನುಭವಿಗಳಿಗೆ ಕನಿಷ್ಠ ಒಂದು ಲಕ್ಷ
 ಈ ಯೋಜನೆ ಅಡಿಯಲ್ಲಿ ಒದಗಿಸಲಾಗುವ ಆರ್ಥಿಕ ಸಹಾಯದ ಜೊತೆಗೆ ಫಲಾನುಭವಿಯು ಕನಿಷ್ಠ 30,000 ಗಳನ್ನು ಅಥವಾ ತನ್ನ ಸಾಮರ್ಥ್ಯ ಹಾಗೂ ವಸತಿಯ ಅವಶ್ಯಕತೆಗೆ ಅನುಸಾರವಾಗಿ ಸಾಧ್ಯವಾದಷ್ಟು ಸ್ವಂತ ಉಳಿತಾಯ ಹೂಡಿಕೆ ಮಾಡಿ ಹೆಚ್ಚಿನ ಹಾಗೂ ಉತ್ತಮ ಸೌಲಭ್ಯಗಳನ್ನು ಹೊಂದಬಹುದು

 ಡಿ ಆರ್ ಐ ಯಡಿ ಸಾಲ ಮತ್ತು ಬಡ್ಡಿಯ ದರ

 ಈ ಯೋಜನೆಯಡಿ ಸ್ಥಳೀಯ ಬ್ಯಾಂಕಿನಿಂದ 20000 ವರೆಗೆ ನಾಲ್ಕು ಪರ್ಸೆಂಟ್ ವಾರ್ಷಿಕ ಬಡ್ಡಿ ದರದಲ್ಲಿ ಸಾಲವನ್ನು ಆಯ್ಕೆಯಾದ ಫಲಾನುಭವಿಗಳು ಪಡೆದುಕೊಳ್ಳಲು ಅವಕಾಶವಿರುತ್ತದೆ

 ಫಲಾನುಭವಿಯ ಆಯ್ಕೆ

 ಕೇಂದ್ರ ಸರ್ಕಾರದಿಂದ ನೀಡಲಾದ ಫಲಾನುಭವಿಗಳ ಪಟ್ಟಿಯಿಂದ ನಿಯಮಾನುಸಾರ ಗ್ರಾಮ ಸಭೆಯಲ್ಲಿ ಆಯ್ಕೆ ಮಾಡಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಪಟ್ಟಿಗೆ ಅನುಮೋದನೆ ಪಡೆಯಲಾಗುವುದು. ನಂತರ ಸಂಬಂಧಪಟ್ಟ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಯ ಅನುಮೋದನೆಯೊಂದಿಗೆ ನಿಗಮದ ಅನುಮೋದನೆ ನೀಡಲಾಗುವುದು.

 ಯೋಜನೆಯ ಅನುಷ್ಠಾನ

 ಪ್ರತಿ ವರ್ಷ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಗುರಿಗನುಗುಣವಾಗಿ ಗುರಿ ನಿಗದಿಪಡಿಸಲಾಗುವುದು
 ಮೀಸಲಾತಿ-SC ST ಶೇಕಡ 60%
 ಅಲ್ಪಸಂಖ್ಯಾತ ಶೇಕಡ 15%
 ಸಾಮಾನ್ಯ ಶೇಕಡಾ 25%


  
 ಜಿಪಿಎಸ್ ತಂತ್ರಜ್ಞಾನ ಅಳವಡಿಕೆ

 2011 12 ನೇ ಸಾಲಿನಿಂದ ಜಿಪಿಎಸ್ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತಿದೆ
 ಅವ್ಯವಹಾರವನ್ನು ತಡೆಗಟ್ಟಲು ಹಾಗೂ ಸರ್ಕಾರದ ಹಣ ದುರುಪಯೋಗವಾಗದಂತೆ ನೋಡಿಕೊಂಡು ಫಲಾನುಭವಿಗಳಿಗೆ ವಸತಿ ಸೌಕರ್ಯವನ್ನು ಪಾರದರ್ಶಕತೆಯ ಮೂಲಕ ನೀಡಲು ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ಈ ತಂತ್ರಜ್ಞಾನದ ಉಪಯೋಗಗಳು ಇಂತಿವೆ

 ಪ್ರತಿ ಮನೆಯ ಪ್ರಗತಿ ಹಂತದ ಛಾಯಾಚಿತ್ರವನ್ನು ಜಿಪಿಎಸ್ ಕ್ಯಾಮೆರಾ ಮೂಲಕ ಸೆರೆ ಹಿಡಿಯುವುದು
 ಒಮ್ಮೆ ವಸತಿ ಸೌಕರ್ಯ ಪಡೆದ ಫಲಾನುಭವಿಗಳ ಪುನರಾವರ್ತನೆಗೆ ತಡೆ
 ಛಾಯಾಚಿತ್ರದ ಆಧಾರದ ಮೇಲೆ ಅನುದಾನ ಬಿಡುಗಡೆ
 ಮಾಹಿತಿಗಾಗಿ ಎಲ್ಲಾ ಮನೆಗಳ ಛಾಯಾಚಿತ್ರಗಳು ನಿಗಮದ ವೆಬ್ ಸೈಟ್ ನಲ್ಲಿ ಲಭ್ಯ
 ಹಣದ ದುರ್ಬಳಕೆಗೆ ತಡೆ

 ಅರ್ಹತೆ ಮತ್ತು ಷರತ್ತುಗಳು
 ಸಂಬಂಧಪಟ್ಟ ಗ್ರಾಮ ಪಂಚಾಯತ್ ವಾಸಿ ಆಗಿರಬೇಕು
 ಮನೆ ನಿವೇಶನ ಹಕ್ಕು ಪತ್ರವನ್ನು ಹೆಂಡತಿ ಹೆಸರಿನಲ್ಲಿ ವಿತರಿಸಬೇಕು
 ಬೇರೆ ಯಾವುದೇ ಯೋಜನೆ ಅಥವಾ ಇಲಾಖೆಯಿಂದ ಈಗಾಗಲೇ ವಸತಿ ಸೌಲಭ್ಯ ಪಡೆದಿರಬಾರದು
 ಮನೆಗಳ ವಿಸ್ತೀರ್ಣ ಮತ್ತು ವಿನ್ಯಾಸ : ಕನಿಷ್ಠ 25 ಚದರ ಮೀಟರ್ ನೆಲಗಟ್ಟು ವಿಸ್ತೀರ್ಣ ಇರುವಂತೆ ಮನೆ ನಿರ್ಮಿಸಬೇಕು. ಇದಕ್ಕಾಗಿ ಯಾವುದೇ ನಕ್ಷೆ ಅಥವಾ ವಿನ್ಯಾಸ ನಿಗದಿಪಡಿಸಿರುವುದಿಲ್ಲ. ಆದರೆ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಮಣ್ಣು ಹವಾ ಗುಣ ಪರಿಸ್ಥಿತಿ ಸ್ಥಳೀಯವಾಗಿ ಲಭ್ಯವಿರುವ ಸಾಮಗ್ರಿಗಳ ಬಳಕೆ ಇತ್ಯಾದಿ ಅಂಶಗಳನ್ನು ಪರಿಗಣಿಸಿ ಪ್ರದೇಶವಾರು ಮತ್ತು ಬದಲಿ ವಿನ್ಯಾಸಗಳನ್ನು ಅನುಸರಿಸಬಹುದು ಮನೆ ನಿರ್ಮಾಣದ ಪ್ರತಿ ಹಂತದಲ್ಲಿಯೂ ಫಲಾನುಭವಿ ಸಕ್ರಿಯವಾಗಿ ಪಾಲ್ಗೊಂಡು ಒಳ್ಳೆಯ ಗುಣಮಟ್ಟದ ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಹೊಂದಬಹುದು.
 ಒಟ್ಟಾರೆ ಆಗಿದ್ದಾಗೆ ಸರ್ಕಾರವು ವಸತಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಧಿಸಬಹುದಾದ ನಿಯಮ ಮತ್ತು ಷರತ್ತುಗಳನ್ನು ತಪ್ಪದೇ ಪಾಲಿಸಬೇಕು 

 ಮನೆ ನಿರ್ಮಾಣ ಮಾಡುವ ಕ್ರಮ
 ಸ್ವಂತ ಫಲಾನುಭವಿಗಳಿಂದ
 ಫಲಾನುಭವಿಯೇ ಸ್ವಂತ ತನ್ನ ಮನೆಯನ್ನು ಸ್ಥಳಿಯವಾಗಿ ಅನುಮೋದಿತ ನಕ್ಷೆಗಳನ್ನು ಗುಣವಾಗಿ ಕಟ್ಟಿಕೊಳ್ಳಬಹುದು( ಇದಕ್ಕಾಗಿ ಕಾಮಗಾರಿ ಆದೇಶ ಹೊರಡಿಸಿ ನಿಗದಿತ ಕಂತುಗಳಲ್ಲಿ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆ ಮೂಲಕ ನೀಡಲಾಗುವುದು ನಿರ್ಮಾಣ ಸಂಸ್ಥೆ ಮೂಲಕ ಮನೆ ನಿರ್ಮಾಣಕ್ಕೆ ಅವಕಾಶ ಇರುವುದಿಲ್ಲ )

 ಮನೆ ನಿರ್ಮಾಣ ಅವಧಿ

 ಕನಿಷ್ಠ ನಾಲ್ಕು ತಿಂಗಳ ಒಳಗಾಗಿ ಮನೆಯನ್ನು ಪೂರ್ಣಗೊಳಿಸುವುದು

 ಒದಗಿಸಬೇಕಾದ ದಾಖಲೆಗಳು
 ಫಲಾನುಭವಿಯಿಂದ
 ವಸತಿಗಾಗಿ ನಿಗದಿತ ಅರ್ಜಿ
 ನಿವೇಶನ ಅಥವಾ ಮನೆಯನ್ನು ಸಾಲ ತೀರುವವರೆಗೂ ನಿಗಮದ ಪರವಾಗಿ ಅಡಮಾನ ಪತ್ರ ಬರೆದು ಕೊಡಬೇಕು
 ಜಾತಿ ಪ್ರಮಾಣ ಪತ್ರ ಅಥವಾ ಆದಾಯ ಪ್ರಮಾಣ ಪತ್ರ

 ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಥವಾ ಕಾರ್ಯನಿರ್ವಹಣಾಧಿಕಾರಿ ಅಥವಾ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಿಂದ

 ಗ್ರಾಮ ಪಂಚಾಯಿತಿ ಅಥವಾ ಇಲಾಖೆ ಯೋಜನೆಯ ಅಡಿಯಲ್ಲಿ ನಿಯಮಗಳನ್ನು ಪಾಲಿಸಿರುವ ಬಗ್ಗೆ ಹಾಗೂ ದಾಖಲೆಗಳನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ಬಗ್ಗೆ ದೃಢೀಕರಣ ಪತ್ರ
 ನಿಗದಿಪಡಿಸಿದ ನಮೂನೆಗಳಲ್ಲಿ ಪ್ರತಿ ತಿಂಗಳು ಅಥವಾ ವರ್ಷ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಗತಿ ವರದಿಗಳನ್ನು ತಪ್ಪದೆ ಸಲ್ಲಿಸಬೇಕು
 ವಸತಿ ಯೋಜನೆಯ ಯಶಸ್ವಿ ಅನುಷ್ಠಾನದ ಬಗ್ಗೆ ಸಂಬಂಧಿಸಿದ ಇತರೆ ಮಾಹಿತಿ ಇತ್ಯಾದಿ

 ಹೆಚ್ಚಿನ ವಿವರಗಳಿಗೆ ಈ ಕೆಳಕಂಡವರನ್ನು ಸಂಪರ್ಕಿಸಿ
 ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ
 ನಂಬರ್ 1 2 3 4
 ಐ ಟಿ ಪಾರ್ಕ್ 1ನೇ ಮಾಡಿ ನಾಲ್ಕನೇ ಮುಖ್ಯ ರಸ್ತೆ ಕೈಗಾರಿಕಾ ಪ್ರದೇಶ  ರಾಜಾಜಿನಗರ-580044
 ದೂರವಾಣಿ-23118888
 ಇ-ಮೇಲ್ -[email protected]
 ವೆಬ್ ಸೈಟ್ - http://ashraya.kar.nic.in/ 

 ನಿಮ್ಮ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಪಂಚಾಯತ್
 ಆಯಾಯ ಸಂಬಂಧಿಸಿದ ಜಿಲ್ಲೆಗಳು
 ಸಂಬಂಧಪಟ್ಟ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು
 ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು

]]>
Fri, 04 Apr 2025 16:17:26 +0530 shivuagrico
Belevime&ಈ ಜಿಲ್ಲೆಯ 21,786 ರೈತರ ಖಾತೆಗೆ 30.05 ಕೋಟಿ ಬೆಳೆ ವಿಮೆ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Belevime-1999 https://krushirushi.in/Belevime-1999 Belevime-ಈ ಜಿಲ್ಲೆಯ 21,786 ರೈತರ ಖಾತೆಗೆ 30.05 ಕೋಟಿ ಬೆಳೆ ವಿಮೆ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

2024-25 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(Pradan mantri fasal bheema yojane) ಯೋಜನೆಯಡಿ ಒಟ್ಟು 21,786 ರೈತರಿಗೆ ರೂ. 30.05 ಕೋಟಿ ಬೆಳೆವಿಮೆ(Belevime) ಪರಿಹಾರ ಮಂಜೂರಾಗಿದ್ದು, ಹಂತ ಹಂತವಾಗಿ ರೈತರ ಖಾತೆಗೆ ಬೆಳೆವಿಮೆ ಪರಿಹಾರ ಜಮಾ ಆಗುವುದು ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು ತಿಳಿಸಿದ್ದಾರೆ.

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಬೆಳೆವಿಮೆ ಹಣ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Fri, 04 Apr 2025 06:43:51 +0530 shivuagrico
Pmkisan rejected list&ಕರ್ನಾಟಕದಲ್ಲಿ 10 ಲಕ್ಷ ರೈತರ ಕೈತಪ್ಪಿದ ಕಿಸಾನ್‌ ಸಮ್ಮಾನ್‌ ಯೋಜನೆ ! ಯಾರದ್ದೆಲ್ಲ ಹೆಸರು ಕ್ಯಾನ್ಸಲ್? https://krushirushi.in/Pmkisan-rejected-list-1997 https://krushirushi.in/Pmkisan-rejected-list-1997 Pmkisan rejected list-ಕರ್ನಾಟಕದಲ್ಲಿ 10 ಲಕ್ಷ ರೈತರ ಕೈತಪ್ಪಿದ ಕಿಸಾನ್‌ ಸಮ್ಮಾನ್‌ ಯೋಜನೆ ! ಯಾರದ್ದೆಲ್ಲ ಹೆಸರು ಕ್ಯಾನ್ಸಲ್?


ಭೂ ದಾಖಲೆಗಳ ಕೊರತೆ, ಇಕೆವೈಸಿ ಸಮಸ್ಯೆ, ತೆರಿಗೆ ಪಾವತಿ ಸೇರಿದಂತೆ ವಿವಿಧ ಕಾರಣಗಳಿಂದ ರಾಜ್ಯದಲ್ಲಿ ಸುಮಾರು 10 ಲಕ್ಷಕ್ಕೂ ಅಧಿಕ ರೈತರು ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯಿಂದ ವಂಚಿತರಾಗಿದ್ದರೆ!


ರಾಜ್ಯದಲ್ಲಿ ಗರಿಷ್ಠ ಮಟ್ಟದ ರೈತರು ಅಂದರೆ 54 ಲಕ್ಷಕ್ಕೂ ಅಧಿಕ ರೈತರು ನೋಂದಣಿ ಮಾಡಿ ಯೋಜನೆಯ ಲಾಭ ಪಡೆಯುತ್ತಿದ್ದರು. ಈ ಪೈಕಿ 44.20 ಲಕ್ಷ ರೈತರಿಗೆ ಮಾತ್ರ ಯೋಜನೆಯ ಲಾಭ ಸಿಗುವಂತಾಗಿದೆ.

ಪ್ರತಿ ಕಂತಿನ ಸಂದರ್ಭದಲ್ಲಿ ರೈತರ ಸಂಖ್ಯೆ ಏರುಪೇರಾಗುತ್ತದೆ. ಏಕೆಂದರೆ, ರೈತರ ನೋಂದಣಿ ಕಾರ್ಯ ನಿರಂತರ ಪ್ರಕ್ರಿಯೆಯಾಗಿದ್ದು, ಅರ್ಹರನ್ನು ಸೇರಿಸುವುದು ಹಾಗೂ ಅನರ್ಹರನ್ನು ತೆಗೆಯುವ ಪ್ರಕ್ರಿಯೆ ನಡೆಯುತ್ತದೆ. ಇದನ್ನು ಗ್ರಾಮ ನೋಡಲ್‌ ಅಧಿಕಾರಿಗಳು ಪರಿಶೀಲಿಸುತ್ತಾರೆ.

2019ರ ನಂತರ ಖಾತೆ ಮಾಡಿಸಿಕೊಂಡ ಲಕ್ಷಾಂತರ ಮಂದಿಗೆ ಈ ಯೋಜನೆಯ ಲಾಭವೇ ಸಿಗುತ್ತಿಲ್ಲ. ಇದಕ್ಕೂ ಮೊದಲು ಯಾವ ರೈತರು ತಮ್ಮ ಹೆಸರಿನಲ್ಲಿ ಖಾತೆ ಹೊಂದಿರುತ್ತಾರೋ ಅಂಥವರು ರೈತ ಸಂಪರ್ಕ ಕೇಂದ್ರಗಳಲ್ಲಿಆಧಾರ್‌ ಮತ್ತು ಪಹಣಿಯೊಂದಿಗೆ ಫ್ರೂಟ್ಸ್‌ ಐಡಿ ತಂತ್ರಾಂಶದಲ್ಲಿ ಹೆಸರು ನೋಂದಣಿ ಮಾಡಿಸಿಕೊಂಡು ಇಕೆವೈಸಿಯೊಂದಿಗೆ ಕಿಸಾನ್‌ ಸಮ್ಮಾನ್‌ ಯೋಜನೆಯ ಲಾಭ ಪಡೆಯಬಹುದಿತ್ತು. ಒಂದು ವೇಳೆ ಯೋಜನೆಯ ಲಾಭ ಪಡೆಯುತ್ತಿದ್ದ ಜಮೀನಿನ ಮಾಲೀಕರು ನಿಧನ ಹೊಂದಿದರೆ, ಇತರೆ ವಾರಸುದಾರರು ಪೌತಿ ಖಾತೆ ಮಾಡಿಸಿದರೆ ಆಗ ಈ ಯೋಜನೆಗೆ ಅರ್ಹರಾಗುತ್ತಿದ್ದರು. ಆದರೆ, ಕೇಂದ್ರ ಸರಕಾರದ ಮಾರ್ಗಸೂಚಿಯಂತೆ 2019ರ ನಂತರ ಜಮೀನು ಖರೀದಿಸಿದವರು ಇದರ ವ್ಯಾಪ್ತಿಗೆ ಬರುವುದಿಲ್ಲಎಂದು ಕೃಷಿ ಇಲಾಖೆ ಹೇಳುತ್ತಿದೆ.

ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಗೆ ನೋಂದಣಿಯು ನಿರಂತರ ಪ್ರಕ್ರಿಯೆ. ಅನರ್ಹರನ್ನು ತೆಗೆಯುವ, ಅರ್ಹರನ್ನು ಸೇರ್ಪಡೆ ಮಾಡುವ
ಕೆಲಸ ಸದಾ ಪ್ರಗತಿಯಲ್ಲಿರುತ್ತದೆ. ಒಂದು ವೇಳೆ ತಾಂತ್ರಿಕ ದೋಷ, ಇ-ಕೆವೈಸಿ ಸಮಸ್ಯೆಯಿಂದ ಯಾವುದೇ ರೈತರ ಹೆಸರು ಯೋಜನೆಯ ಪಟ್ಟಿಯಿಂದ ಕೈಬಿಟ್ಟಿದ್ದರೆ, ಮರುಪರಿಶೀಲನೆಗೆ ಅವಕಾಶವಿದೆ. ಅರ್ಹರಿಗೆ ಬಾಕಿ ಸೇರಿಸಿ ಹಣವನ್ನು ನೀಡಲಾಗುವುದು. ಹೀಗಾಗಿ, ಅರ್ಹರಿಗೆ ವಂಚನೆಯಾಗುವುದಿಲ್ಲ ಎಂದು ಕೃಷಿ ಇಲಾಖೆ ನಿರ್ದೇಶಕ ಜಿ.ಟಿ. ಪುತ್ರ ತಿಳಿಸಿದ್ದಾರೆ.


ಅರ್ಹತೆಗೆ ಮಾನದಂಡ

ಭೂಮಿ ಹೊಂದಿರುವ ಸಂಘ ಅಥವಾ ಸಂಸ್ಥೆಗಳು, ಮಾಜಿ ಮತ್ತು ಹಾಲಿ ಸಾಂವಿಧಾನಿಕ ಹುದ್ದೆಗಳಲ್ಲಿ ಕುಟುಂಬ ಸದಸ್ಯರು, 10 ಸಾವಿರ ಅಥವಾ ಅದಕ್ಕಿಂತ ಹೆಚ್ಚಿನ ಪಿಂಚಣಿ ಪಡೆಯುವ ನಿವೃತ್ತರು(ಗ್ರೂಪ್‌ ಡಿ ಹೊರತುಪಡಿಸಿ), ಕಳೆದ ಸಾಲಿನಲ್ಲಿ ಆದಾಯ ತೆರಿಗೆ ಪಾವತಿಸಿದವರು, ವೈದ್ಯರು, ಎಂಜಿನಿಯರ್‌ಗಳು, ವಕೀಲರು, ಲೆಕ್ಕ ಪರಿಶೋಧಕರು, ವಾಸ್ತುಶಿಲ್ಪದಂತಹ ವೃತ್ತಿಪರರು ಯೋಜನೆಗೆ ಅನರ್ಹರು.

2023ರ ಅಕ್ಟೋಬರ್‌ 25ರ ಹೊಸ ಮಾರ್ಗಸೂಚಿ ಅನ್ವಯ ಕನಿಷ್ಠ ಮೂರು ವರ್ಷ ಆದಾಯ ತೆರಿಗೆ ಪಾವತಿಸಿದ್ದರೆ ಯೋಜನೆಗೆ ಅನರ್ಹರಾಗಿರುತ್ತಾರೆ.


ರಾಜ್ಯದ ಫಲಾನುಭವಿಗಳು

ರಾಜ್ಯದ 44.20 ಲಕ್ಷಕ್ಕೂ ಅಧಿಕ ರೈತ ಫಲಾನುಭವಿಗಳಿಗೆ ಕೇಂದ್ರ ಸರಕಾರದಿಂದ ಒಟ್ಟಾರೆ 884.01 ಕೋಟಿ ರೂ.ಗಳನ್ನು ಪ್ರಧಾನ ಮಂತ್ರಿಯವರು ರೈತರ ಆಧಾರ್‌ ಜೋಡಿತ ಬ್ಯಾಂಕ್‌ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ.


ಯೋಜನೆಯ ಉದ್ದೇಶ

ಸಾಗುವಳಿ ಭೂಮಿ ಹೊಂದಿರುವ ಎಲ್ಲಾಅರ್ಹ ರೈತ ಕುಟುಂಬಗಳಿಗೆ ಕೃಷಿ ಚಟುವಟಿಕೆಯಲ್ಲಿ ಉತ್ತಮ ಪರಿಕರಗಳನ್ನು ಬಳಸಿ ಬೆಳೆಗಳ ಆರೋಗ್ಯ ನಿರ್ವಹಣೆ ಹಾಗೂ ಹೆಚ್ಚಿನ ಇಳುವರಿ ಪಡೆದು ನಿರೀಕ್ಷಿತ ಆದಾಯಗೊಳಿಸಲು ನೆರವಾಗಲು ವಾರ್ಷಿಕ 6 ಸಾವಿರ ರೂ.ಗಳ ಆರ್ಥಿಕ ನೆರವು ನೀಡಲಾಗುತ್ತಿದೆ. 2 ಸಾವಿರ ರೂ.ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ಅನುದಾನ ನೀಡಲಾಗುತ್ತದೆ.

Pmkisan instalment ineligible list-ಪಿಎಂ ಕಿಸಾನ್ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

ಇದನ್ನೂ ಓದಿ

Kisan samman-ತುಂಡು ಕೃಷಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರಿಗೂ ಪಿಎಂ ಕಿಸಾನ್ ಹಣ-ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್,ಹಾಗಾದರೆ ಅರ್ಹತೆಯ ಮಾನದಂಡಗಳೇನು? - https://krushirushi.in/Kisan-samman-1959 

 

]]>
Fri, 04 Apr 2025 05:34:26 +0530 shivuagrico
Waqf property&ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ, ನಿಮ್ಮ ಹೊಲ ಮನೆ ಪಹಣೆಯಲ್ಲಿ ವಕ್ಫ್ ಬೊರ್ಡ್ ಹೆಸರಿದೆಯೆ ಹೀಗೆ ಚೆಕ್ ಮಾಡಿಕೊಳ್ಳಿ https://krushirushi.in/Waqf-property-1995 https://krushirushi.in/Waqf-property-1995 Waqf property-ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ

ವಕ್ಫ್ ಮಸೂದೆ(Waqf amendment bill-2025) ಎಂದರೇನು?

ವಕ್ಫ್ (ತಿದ್ದುಪಡಿ) ಮಸೂದೆ 2024, 1995 ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮಸೂದೆಯಾಗಿದೆ. ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆಯನ್ನ ಇಂದು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ವಕ್ಫ್ ಆಸ್ತಿಗಳ ನಿರ್ವಹಣೆ, ಪಾರದರ್ಶಕತೆ ಮತ್ತು ದುರುಪಯೋಗ ತಡೆಗಟ್ಟುವಿಕೆಗಾಗಿ ನಿಯಮಗಳನ್ನು ಬಿಗಿಗೊಳಿಸುವುದು ಇದರ ಉದ್ದೇಶವಾಗಿದೆ. ಇದು ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರು ಮತ್ತು ಮಹಿಳಾ ಸದಸ್ಯರನ್ನು ಸೇರಿಸುವುದು, ಕಲೆಕ್ಟರ್‌ಗೆ ಆಸ್ತಿಯನ್ನು ಸಮೀಕ್ಷೆ ಮಾಡುವ ಹಕ್ಕನ್ನು ನೀಡುವುದು ಮತ್ತು ವಕ್ಫ್ ನ್ಯಾಯಮಂಡಳಿಯ ನಿರ್ಧಾರಗಳನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ನಿಬಂಧನೆಯನ್ನು ಒಳಗೊಂಡಿದೆ.

Waqf property-ನಿಮ್ಮ ಹೊಲ ಮನೆ ಪಹಣೆಯಲ್ಲಿ ವಕ್ಫ್ ಬೊರ್ಡ್ ಹೆಸರಿದೆಯೆ ಹೀಗೆ ಚೆಕ್ ಮಾಡಿಕೊಳ್ಳಿ

ನಿಮಗೆ ಗೊತ್ತಿಲ್ಲದೇ ಹಾಗೆ ನಿಮ್ಮ ಪಹಣಿಯಲ್ಲಿ(RTC) ಅವರ ಹೆಸರು ಹಾಕಿದ್ದಾರೆ ಎಂಬುದನ್ನು ರೈತರು ಒಮ್ಮೆ ಪರಿಶೀಲಿಸಿ. ಈ ಕೆಲಸವನ್ನು ಪ್ರತಿಯೊಂದು ರೈತರು ಆದಷ್ಟು ಬೇಗ ಮಾಡಬೇಕು. ಈ ಮಾಹಿತಿ ನಿಮ್ಮ ಕಾನೂನು ಹೋರಾಟಕ್ಕೆ ನಿರ್ಣಾಯಕ ಹಾಗೂ ಸಾಕ್ಷ್ಯ ಸಂಗ್ರಹಿಸಲು ಅಗತ್ಯವಾದ ಪ್ರಕ್ರಿಯೆ ಆಗಿರುತ್ತದೆ. ಆದ್ದರಿಂದ ಇಂದೇ ನಿಮ್ಮ ಪಹಣಿಯ(Uthara) ಕಾಪಿ ಪಡೆದು ಪರಿಶೀಲನೆ ಮಾಡಿ, ಒಂದು ವೇಳೆ ಯಾರಾದರು ಎಂದು ನಮೂದಿಸಲಾಗಿದ್ದಲ್ಲಿ ಕೂಡಲೇ ಜಮೀನಿನ ದಾಖಲೆ(Land records) ಹಾಗೂ ಪಹಣಿಯೊಂದಿಗೆ ತಹಶಿಲ್ದಾರ್ ಅಥವಾ ಜಿಲ್ಲಾದಿಕಾರಿಗಳಿಗೆ ದೂರು ಸಲ್ಲಿಸಿ

ನಿಮ್ಮ ಪಹಣೆಯಲ್ಲಿ(pahani) ಯಾರ ಹೆಸರಿದೆ ಎಂದು ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಲಿಂಕ್ ಮೋಲೆ ಕ್ಲಿಕ್ ಮಾಡಿ

https://landrecords.karnataka.gov.in/Service2/

 ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ

  ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ

ನಂತರ view ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ

ಪಹಣೆಯಲ್ಲಿ ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.

ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.

]]>
Thu, 03 Apr 2025 07:15:52 +0530 shivuagrico
Gruhalakshmi list&ಈ ಪಟ್ಟಿಯಲ್ಲಿರುವವರಿಗೆ ಜಮಾ ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ,ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಚೆಕ್ ಮಾಡಿ https://krushirushi.in/Gruhalakshmi-list-1994 https://krushirushi.in/Gruhalakshmi-list-1994 Gruhalakshmi list-ಈ ಪಟ್ಟಿಯಲ್ಲಿರುವವರಿಗೆ ಜಮಾ ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ

ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಈಗಾಗಲೇ ಘಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣ ಕೂಡ ಬಿಡುಗಡೆಯಾಗಿದ್ದು, ಶೀಘ್ರವೇ ಜಮೆಯಾಗಲಿದೆ.” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ.

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Thu, 03 Apr 2025 05:49:23 +0530 shivuagrico
ವಾರದೊಳಗೆ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ&Bele parihara list 2024 https://krushirushi.in/Bele-parihara-list-1993 https://krushirushi.in/Bele-parihara-list-1993 ವಾರದೊಳಗೆ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ-Bele parihara list 2024

ಕೇಂದ್ರ ಸರ್ಕಾರದ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 2024-25 ನೇ ಸಾಲಿನಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಕೇಂದ್ರ ಸರ್ಕಾರದಿಂದ 2 ನೇ ಕಂತಿನ ಅನುದಾನ ರೂ. 366.00 ಕೋಟಿಗಳನ್ನು ಮೇಲೆ ಓದಲಾದ (7) ರ ಪತ್ರದಲ್ಲಿ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುತ್ತದೆ. ಮೇಲೆ ಓದಲಾದ (8) ರ ಹಿಂಬರಹದಲ್ಲಿ ಆರ್ಥಿಕ ಇಲಾಖೆಯು 2 ನೇ ಕಂತಿನ ರಾಜ್ಯದ ಪಾಲು ರೂ. 122.00 ಕೋಟಿಗಳನ್ನು ಬಿಡುಗಡೆ ಮಾಡಿರುತ್ತದೆ.

ವಿವತ್ತು ನಿರ್ವಹಣೆಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರದ ಗ್ರಹ ಮಂತ್ರಾಲಯವು ಹೊರಡಿಸಿರುವ ಮಾರ್ಗಸೂಚಿಗಳನ್ವಯ ವಿಪತ್ತು ನಿರ್ವಹಣೆಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಿರ್ದೇಶಕರು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ರವರಿಗೆ ಹಾಗೂ ನೈಸರ್ಗಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ತಕ್ಷಣ ನಿಭಾಯಿಸಲು ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡುವುದು ಅವಶ್ಯಕವಾಗಿರುತ್ತದೆ.

ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

]]>
Wed, 02 Apr 2025 19:47:17 +0530 shivuagrico
Cyclone&ರಾಜ್ಯದಲ್ಲಿ ಸೈಕ್ಲೋನ್ ಅಬ್ಬರ,ಈ 13 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ https://krushirushi.in/Cyclone-1992 https://krushirushi.in/Cyclone-1992 Cyclone-ರಾಜ್ಯದಲ್ಲಿ ಸೈಕ್ಲೋನ್ ಅಬ್ಬರ,ಈ 13 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ


ಏಪ್ರಿಲ್ ತಿಂಗಳ ಮೊದಲ ವಾರ ರಾಜ್ಯದಲ್ಲಿ ಭರ್ಜರಿ ಮಳೆ ಮುನ್ಸೂಚನೆ ಸಿಕ್ಕಿದೆ. ಭಾರೀ ಮಳೆಯ ಹಿನ್ನೆಲೆ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೂಡಾ ಘೋಷಿಸಲಾಗಿದೆ.

ಎಲ್ಲೆಲ್ಲಿ ಭಾರೀ ಮಳೆ ಅಲರ್ಟ್?

ಏಪ್ರಿಲ್ 4 ಶುಕ್ರವಾರ , 5 ಶನಿವಾರ ಹಾಗೂ 6 ಭಾನುವಾರದಂದು ಭಾರಿ ಮಳೆ ಹಿನ್ನೆಲೆ ಈ ಪ್ರಮುಖ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ವಿಜ್ಞಾನಿ ಸಿಎಸ್ ಪಾಟೀಲ್ ಹೇಳಿದ್ದಾರೆ.


ಯಾವ್ಯಾವ ಜಿಲ್ಲೆಗಳಲ್ಲಿ ಭಾರೀ ಮಳೆ?

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ,
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗದಲ್ಲಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ,ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದಿನಿಂದ ಹಗುರ ಮಳೆ ಆರಂಭವಾಗಿ, ಬುಧವಾರದಿಂದ ರಾಜ್ಯದಾದ್ಯಂತ ಮಳೆ ವ್ಯಾಪಿಸಲಿದೆ. ಏ.3, 4, ಹಾಗೂ 5 ರಂದು ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಲ್ಲಿ ಏ.2 ರಿಂದ ಏ.4 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರಾದ ಸಿಎಸ್ ಪಾಟೀಲ್ ಹೇಳಿದ್ದಾರೆ.

ಕರ್ನಾಟಕದ 7 ದಿನಗಳ ಹವಾಮಾನ ಮುನ್ಸೂಚನೆ
ದಿನಾಂಕ 01-04-2025: ದಿನ 1 (ಏಪ್ರಿಲ್ 1, 2025): ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಹಗುರ ಮಳೆ ಆಗಲಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ.

ದಿನ 2 (ಏಪ್ರಿಲ್ 2, 2025): ರಾಜ್ಯದಲ್ಲಿ 50-60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಕಲಬುರ್ಗಿ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಆಗಲಿದೆ.

ಏಪ್ರಿಲ್ 2 ರಂದು ಭಾರೀ ಮಳೆ ಅಲರ್ಟ್

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವೆಡೆ ಮತ್ತು ಬಳ್ಳಾರಿ, ವಿಜಯಪುರ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.


ವಾಯುಭಾರ ಕುಸಿತದಿಂದ ಭಾರೀ ಮಳೆ

ದಿನ 3 (ಏಪ್ರಿಲ್ 3, 2025): ವಾಯುಭಾರ ಕುಸಿತದ ಪ್ರಭಾವದಿಂದ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ 50-60 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಮಳೆ ಸಾಧ್ಯತೆ ಇದೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-60 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ ಗಂಟೆಗೆ 40-60 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಿನ 4-5 (ಏಪ್ರಿಲ್ 4 ಹಾಗೂ 5 ರಂದು 2025): ಗಾಳಿ ಸಂಗಮ ಮತ್ತು ವಾಯುಭಾರ ಕುಸಿತದ ಪ್ರಭಾವದಿಂದ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಮತ್ತು ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಗಂಟೆಗೆ 40-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಿನ 6 (ಏಪ್ರಿಲ್ 6, 2025): ಗಾಳಿಯ ಸಂಗಮ ಮತ್ತು ವಾಯುಭಾರ ಕುಸಿತದ ಪ್ರಭಾವದಿಂದ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಹಲವು ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಿನ 7 (ಏಪ್ರಿಲ್ 7, 2025): ಕರಾವಳಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮತ್ತು ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

]]>
Wed, 02 Apr 2025 14:35:24 +0530 shivuagrico
Bele vime&ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Bele-vime-1991 https://krushirushi.in/Bele-vime-1991 Bele vime-ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Tue, 01 Apr 2025 21:45:31 +0530 shivuagrico
Tahasildar verification approved ಬೆಳೆಪರಿಹಾರ ಪಟ್ಟಿ ಬಿಡುಗಡೆ,ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಬೆಳೆ ಪರಿಹಾರ ಜಮಾ https://krushirushi.in/Tahasildar-verification-approved-1990 https://krushirushi.in/Tahasildar-verification-approved-1990 Tahasildar verification approved ಬೆಳೆಪರಿಹಾರ ಪಟ್ಟಿ ಬಿಡುಗಡೆ,ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಬೆಳೆ ಪರಿಹಾರ ಜಮಾ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ


ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ

ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ

ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ

Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.

]]>
Tue, 01 Apr 2025 19:51:29 +0530 shivuagrico
Gruhalakshmi list&ಈ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ&ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ https://krushirushi.in/Gruhalakshmi-list-1989 https://krushirushi.in/Gruhalakshmi-list-1989 Gruhalakshmi list-ಈ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವನ್ನು ಖಜಾನೆಗೆ ಕಳುಹಿಸಿದ್ದು, ಯುಗಾದಿ ಮತ್ತು ರಾಮ್ಹಾನ್ ಹಬ್ಬದ ಸಂದರ್ಭದಲ್ಲಿ ಖುಷಿಯ ವಿಚಾರ. ಫೆಬ್ರವರಿ ತಿಂಗಳ ಹಣವನೂ ಶೀಘ್ರವೇ ನೀಡುತ್ತೇವೆ" ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ರವಿವಾರ ಭರವಸೆ ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಇನ್ನೆರಡು ದಿನಗಳಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ ಎಂದು ಹೇಳಿದರು.

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Tue, 01 Apr 2025 16:03:37 +0530 shivuagrico
Parihara payment&ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್‌ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Parihara-payment-1988 https://krushirushi.in/Parihara-payment-1988 Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್‌ ಸಬ್ಸಿಡಿ ಬಿಡುಗಡೆ

https://everydaytrends.in/kmf-to-procure-maize-at-2400-per-quintal/ 

ರಾಜ್ಯದ ರೈತರಿಗೆ ಕೆಎಂಎಫ್ ನಿಂದ ಗುಡ್ ನ್ಯೂಸ್: ಕ್ವಿಂಟಾಲ್ ಗೆ 2400 ರೂ. ದರದಲ್ಲಿ ಮೆಕ್ಕೆಜೋಳ ಖರೀದಿ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.


ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್‌ ಸಬ್ಸಿಡಿ ರೈತರ ಬ್ಯಾಂಕ್‌ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/PariharaPayment/

ನಂತರ "ಆಧಾರ್ ಸಂಖ್ಯೆ/Aadhar number" ಮೇಲೆ ಕ್ಲಿಕ್ ಮಾಡಿ

ನಂತರ calamity type "Flood" ಎಂದು ಋುತು "2024-25" ಎಂದು select ಮಾಡಿ

ನಂತರ ನಿಮ್ಮ ಆಧಾರ್ ನಂಬರ್/Aadhar number ಹಾಕಿ,captch code ಹಾಕಿ,ವಿವರಗಳನ್ನು ಪಡೆಯಲು/Fetch details ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಪರಿಹಾರ ಹಣ ಜಮಾ ಸ್ಟೇಟಸ್ ತಿಳಿಯಲಿದೆ

]]>
Tue, 01 Apr 2025 05:49:50 +0530 shivuagrico
Karnataka heavy rainfall alert imd&ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಆಲಿಕಲ್ಲು ಸಹಿತ ಭಾರಿ ಮಳೆ https://krushirushi.in/Karnataka-heavy-rainfall-alert-imd-1987 https://krushirushi.in/Karnataka-heavy-rainfall-alert-imd-1987 Karnataka heavy rainfall alert imd-ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಆಲಿಕಲ್ಲು ಸಹಿತ ಭಾರಿ ಮಳೆ


ಏಪ್ರಿಲ್‌ 4ರವರೆಗೆ ಯೆಲ್ಲೋ ಅಲರ್ಟ್‌

ಕರ್ನಾಟಕದ ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಏಪ್ರಿಲ್‌ 4ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಏ.1ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿಯ ವೇಗದೊಂದಿಗೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗಂಟೆಗೆ 50-60 ಕಿಮೀ ವೇಗದ ಗಾಳಿಯೊಂದಿಗೆ ಆಲಿಕಲ್ಲು ಮತ್ತು ಬಿರುಗಾಳಿ ಸಹಿತ ಹಗುರ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏ. 2ರಂದು ಕರಾವಳಿಯ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆಲಿಕಲ್ಲು ಮಳೆ ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 40-50 ಕಿಲೋಮೀಟರ್ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಂಭವಿಸಬಹುದು. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾವೇರಿ, ಬೀದರ್, ಕಲ್ಬುರ್ಗಿ, ಯಾದಗಿರಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಅಲಿಕಲ್ಲು ಮತ್ತು ಗಂಟೆಗೆ 50-60 ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ಹಗುರ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಇದೆ.

ಏ. 3ರಂದು ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಚಿತ್ರದುರ್ಗ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವೆಡೆ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಅಲಿಕಲ್ಲು ಮಳೆ ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 40-50 ಕಿಲೋಮೀಟರ್ ಸಂಭವಿಸಬಹುದು.

]]>
Mon, 31 Mar 2025 18:45:43 +0530 shivuagrico
Free sheep training&ಉಚಿತ ಊಟ ವಸತಿಯೊಂದಿಗೆ 10 ದಿನಗಳ ಕುರಿ ಸಾಕಾಣಿಕೆ ತರಬೇತಿ&Uchitha Kuri sakanike tharabethi https://krushirushi.in/Free-sheep-training-1986 https://krushirushi.in/Free-sheep-training-1986 Free sheep training-ಉಚಿತ ಊಟ ವಸತಿಯೊಂದಿಗೆ 10 ದಿನಗಳ ಕುರಿ ಸಾಕಾಣಿಕೆ ತರಬೇತಿ-Uchitha Kuri sakanike tharabethi

 

ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ ಹತ್ತು ದಿನಗಳ ಕಾಲ ಕುರಿ ಸಾಕಾಣಿಕೆ ತರಬೇತಿಯನ್ನು ದಿನಾಂಕ 2/4/2025 ರಿಂದ 11/4/2025 ವರೆಗೆ ಹಮ್ಮಿಕೊಳ್ಳಲಾಗಿದೆ.


ತರಬೇತಿಯಲ್ಲಿ ಕಲಿಸುವ ವಿಷಯಗಳು
1)ಕುರಿ ತಳಿಗಳು

2)ಕುರಿಗೆ  ಬರುವಂತಹ ವಿವಿಧ ರೋಗಗಳು 
3)ಕುರಿಗಳನ್ನು ಕೊಬ್ಬಿಸುವ ವಿಧಾನ 
4)ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಹಿತಿ
5)ವಿವಿಧ ಔಷಧ ಉಪಚಾರಗಳು 
6)ಕುರಿ ಶಡ್ ನಿರ್ಮಾಣ
7)ಲೋನ್ ಗಳ ಮಾಹಿತಿ 
8)ಸಬ್ಸಿಡಿಗಳ ಮಾಹಿತಿ 
9) ಪ್ರಾಜೆಕ್ಟ್ ರಿಪೋರ್ಟ್ ಮಾಹಿತಿ 
10) ಮನೆಮದ್ದುಗಳ ಮಾಹಿತಿ 

 ಇನ್ನು ಇತರೆ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು 

 ಆಸಕ್ತರು ಕೂಡಲೇ ಕೆಳಗಡೆ ನಮೂದಿಸಿದ ಮೊಬೈಲ್ ನಂಬರ್ ಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಿ 
8660219375

.

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಇರುವ ಲೀಡ್ ಬ್ಯಾಂಕ್ ತರಬೇತಿ ಕೇಂದ್ರಗಳಲ್ಲಿ ತರಭೇತಿ ಆಯೋಜಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಲೀಡ್ ಬ್ಯಾಂಕ್ ಸಂಪರ್ಕಿಸಿ

]]>
Mon, 31 Mar 2025 13:03:42 +0530 shivuagrico
ಮುಸ್ಲಿಮರ ಹೆಸರಿನಲ್ಲಿ 29,000 ನಕಲಿ ಖಾತೆ,ಸತ್ತವರ ಖಾತೆಗೂ ಹಣ ವರ್ಗಾವಣೆ, ಇಲ್ಲಿದೆ ಪಿಎಂ ಕಿಸಾನ್ ಅನರ್ಹ ಪಟ್ಟಿ&Pmkisan ineligible list https://krushirushi.in/Pmkisan-ineligible-list-1985 https://krushirushi.in/Pmkisan-ineligible-list-1985 ಮುಸ್ಲಿಮರ ಹೆಸರಿನಲ್ಲಿ 29,000 ನಕಲಿ ಖಾತೆ,ಸತ್ತವರ ಖಾತೆಗೂ ಹಣ ವರ್ಗಾವಣೆ, ಇಲ್ಲಿದೆ ಪಿಎಂ ಕಿಸಾನ್ ಅನರ್ಹ ಪಟ್ಟಿ-Pmkisan ineligible list

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(Pradan mantri kisan samman nidhi yojane)ಹಣ ಪಡೆಯಲು ನಕಲಿ ಖಾತೆಗಳನ್ನು ರಚಿಸಿರುವ ಬೃಹತ್ ಹಗರಣ ರಾಜಸ್ತಾನದಲ್ಲಿ ಬೆಳಕಿಗೆ ಬಂದಿದೆ.

ರಾಜಸ್ಥಾನದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ದೊಡ್ಡ ಹಗರಣ ಬೆಳಕಿಗೆ ಬಂದಿದ್ದು, ಯೋಜನೆಯ ಹಣ ಪಡೆಯಲು ಮುಸ್ಲಿಮರ ಹೆಸರಿನಲ್ಲಿ 29,000 ನಕಲಿ ಖಾತೆಗಳನ್ನು ತೆರೆದಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.

29 ಸಾವಿರ ನಕಲಿ ಖಾತೆಗಳಿಗೆ 7 ಕೋಟಿ ವರ್ಗಾವಣೆ

ವಂಚಕರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅಕ್ರಮವಾಗಿ ಹಣ ಪಡೆಯಲು ಸುಮಾರು 29 ಸಾವಿರ ನಕಲಿ ಬ್ಯಾಂಕ್ ಖಾತೆಗಳನ್ನು ರಚಿಸಿದ್ದಾರೆ. ಈ ಖಾತೆಗಳಿಗೆ ಸುಮಾರು 7 ಕೋಟಿ ರೂ ಹಣ ವರ್ಗಾವಣೆಯಾಗಿದೆ ಎಂದು ಹೇಳಲಾಗಿದೆ. ಅಚ್ಚರಿ ಎಂದರೆ ಈ 29 ಸಾವಿರ ಖಾತೆಗಳು ರಾಜಸ್ತಾನದ ಒಂದೇ ಜಿಲ್ಲೆಯಲ್ಲಿ ರಚಿಸಲಾಗಿದೆ.

ಇನ್ನು ಕರ್ನಾಟಕದಲ್ಲಿ ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯ (ಪಿಎಂ-ಕಿಸಾನ್) ಫಲಾನುಭವಿಗಳ ಸಂಖ್ಯೆ(pmkisan ineligible list) ಐದು ಲಕ್ಷದಿಂದ ಆರು ಲಕ್ಷದಷ್ಟು ಕುಸಿತವಾಗಿದೆ.


ಲೋಕಸಭೆಯಲ್ಲಿ ಮೈಸೂರು ಸಂಸದ ಯದುವೀ‌ರ್ ಒಡೆಯ‌ರ್ ಮಂಗಳವಾರ ಕೇಳಿದ ಪ್ರಶ್ನೆಗೆ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್ ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ.


13ನೇ ಕಂತಿನವರೆಗೆ (2023ರ ಮಾರ್ಚ್) ರಾಜ್ಯದ ಫಲಾನುಭವಿಗಳ ಸಂಖ್ಯೆ 49 ಲಕ್ಷದಷ್ಟು ಇತ್ತು. 14ನೇ ಕಂತಿನಲ್ಲೂ ಫಲಾನುಭವಿಗಳ ಸಂಖ್ಯೆ 49.34 ಲಕ್ಷ ಆಗಿತ್ತು. 15ನೇ ಕಂತಿನಲ್ಲಿ ಈ ಸಂಖ್ಯೆ 43.78 ಲಕ್ಷಕ್ಕೆ ಕುಸಿಯಿತು. ಆ ಬಳಿಕ ಸಂಖ್ಯೆಯಲ್ಲಿ ಗಣನೀಯ ಏರಿಕೆ ಆಗಿಲ್ಲ.


ಪಿಎಂ- ಕಿಸಾನ್ ಯೋಜನೆಯಡಿ ಕೃಷಿಕರಿಗೆ ವಾರ್ಷಿಕ ₹6 ಸಾವಿರ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಈ ಮೊತ್ತವನ್ನು ₹8 ಸಾವಿರ ಅಥವಾ ₹12 ಸಾವಿರಕ್ಕೆ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Pmkisan instalment ineligible list-ಪಿಎಂ ಕಿಸಾನ್ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

ಇದನ್ನೂ ಓದಿ

Kisan samman-ತುಂಡು ಕೃಷಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರಿಗೂ ಪಿಎಂ ಕಿಸಾನ್ ಹಣ-ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್,ಹಾಗಾದರೆ ಅರ್ಹತೆಯ ಮಾನದಂಡಗಳೇನು? - https://krushirushi.in/Kisan-samman-1959 

]]>
Mon, 31 Mar 2025 08:36:38 +0530 shivuagrico
Gruhalakshmi list&ಗೃಹಿಣಿಯರಿಗೆ ಯುಗಾದಿ ಗಿಫ್ಟ್,ಈ ಪಟ್ಟಿಯಲ್ಲಿರುವವರಿಗೆ ಜಮಾ ಆಯ್ತು ಗೃಹಲಕ್ಷ್ಮಿ ಹಣ https://krushirushi.in/Krushirushi-1984 https://krushirushi.in/Krushirushi-1984 Gruhalakshmi list-ಗೃಹಿಣಿಯರಿಗೆ ಯುಗಾದಿ ಗಿಫ್ಟ್,ಈ ಪಟ್ಟಿಯಲ್ಲಿರುವವರಿಗೆ ಜಮಾ ಆಯ್ತು ಗೃಹಲಕ್ಷ್ಮಿ ಹಣ


ಯುಗಾದಿ, ರಂಜಾನ್ ಹಬ್ಬಕ್ಕೆ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ನೀಡುವ 2,000 ರೂ.

ಸಹಾಧನದ ಒಂದು ಕಂತಿನ ಹಣ ಬಿಡುಗಡೆ ಮಾಡಲಾಗುವುದು, ಈಗಾಗಲೇ ಹಣ ಬಿಡುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಯುಗಾದಿ, ರಂಜಾನ್ ಹಬ್ಬಕ್ಕೆ ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷ ಬದ್ಧತೆಗೆ ಹೆಸರಾಗಿರುವ ಪಕ್ಷ. ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತಿ ದೊಡ್ಡ ಯೋಜನೆಯಾಗಿದೆ. 1.22 ಕೋಟಿ ಫಲಾನುಭಗಳಿಗೆ ಇದುವರೆಗೂ 34 ಸಾವಿರ ಕೋಟಿ ರೂಪಾಯಿ ಹಣವನ್ನು ಹಾಕಲಾಗಿದೆ. ಈ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ನನಗೆ ಹೆಮ್ಮೆಯಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Sun, 30 Mar 2025 22:16:01 +0530 shivuagrico
NPCI Status ನಲ್ಲಿ Active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/NPCI-status-active-1983 https://krushirushi.in/NPCI-status-active-1983 NPCI Status ನಲ್ಲಿ Active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ password create ಮಾಡಿ

Mobile number,Create ಮಾಡಿದ password ಹಾಗೂ captcha code ಹಾಕಿ ಲಾಗಿನ್ ಮಾಡಿ

ನಂತರ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, Search ಮೇಲೆ ಕ್ಲಿಕ್ ಮಾಡಿ

ನಂತರ NPCI check ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ NPCI active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆಹಾನಿ,ಬೆಳೆವಿಮೆ,ಪಿಎಂ ಕಿಸಾನ್ ಹಣ.

NPCI inactive ಎಂದು ಇದ್ದರೆ ನಿಮ್ಮ ಖಾತೆ ಇರುವ ಬ್ಯಾಂಕ್ ಗೆ ಹೋಗಿ ಕೂಡಲೇ NPCI Mapping ಮಾಡಿಸಿ

]]>
Sun, 30 Mar 2025 18:15:31 +0530 shivuagrico
Belesala manna patti bidugade&31 ಸಾವಿರ ಹಸಿರು ಪಟ್ಟಿಯಲ್ಲಿರುವ ಸಾಲ ಮನ್ನಾ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿರುವ ರೈತರ 167 ಕೋಟಿ ಸಾಲ ಮನ್ನಾ https://krushirushi.in/Belesala-manna-patti-bidugade-1982 https://krushirushi.in/Belesala-manna-patti-bidugade-1982 Belesala Manna Patti bidugade-31 ಸಾವಿರ ಹಸಿರು ಪಟ್ಟಿಯಲ್ಲಿರುವ ಸಾಲ ಮನ್ನಾ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿರುವ ರೈತರ 167 ಕೋಟಿ ಸಾಲ ಮನ್ನಾ

 ಸಾಲಮನ್ನಾ ತಂತ್ರಾಂಶದಲ್ಲಿ ಅರ್ಹತೆ ಹೊಂದಿ 2020-21 ನೇ ಸಾಲಿನಲ್ಲಿ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯು ಹಸಿರು ಪಟ್ಟಿ ನೀಡಿದ 31 ಸಾವಿರ ರೈತರಿಗೆ 167.51 ಕೋಟಿ ರೂ.ಗಳ ಅನುದಾನ ಬಿಡುಗಡೆ ಭೂದಾಖಲೆಗಳ ಇಲಾಖೆಯಿಂದ ಹಸಿರು ಪಟ್ಟಿ ನೀಡಲಾಯಿತು.


ಸರ್ಕಾರ 17.06 ಲಕ್ಷ ರೈತರಿಗೆ 7,987.47 ಕೋಟಿ ರೂ.ಗಳನ್ನು ಉಳಿತಾಯ ಖಾತೆಗೆ ಬಿಡುಗಡೆ ಮಾಡಿ ಸಾಲಮನ್ನಾ ಸೌಲಭ್ಯವನ್ನು ದೊರಕಿಸಿದೆ ಎಂದು ವಿವರಿಸಿದ್ದಾರೆ. ಸಾಲಮನ್ನಾ ತಂತ್ರಾಂಶದಲ್ಲಿ ಅರ್ಹತೆ ಹೊಂದಿ 2020-21 ನೇ ಸಾಲಿನಲ್ಲಿ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯು ಹಸಿರು ಪಟ್ಟಿ ನೀಡಿದ 31 ಸಾವಿರ ರೈತರಿಗೆ 167.51 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಅಲ್ಲಿ ಅಂಗೀಕಾರಗೊಂಡ ಬಳಿಕ ಸಾಲಮನ್ನಾದ ಅನುದಾನವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

ಕೆಲವು ಡಿಸಿಸಿ ಬ್ಯಾಂಕ್‌ಗಳ ವ್ಯಾಪ್ತಿಯಲ್ಲಿ ಬರುವ ಸಹಕಾರ ಸಂಘಗಗಳಲ್ಲಿ ಸಾಲಮನ್ನಾ ಆಗಿರುವ ರೈತರಿಗೆ ಪುನಃ ಸಾಲ ನೀಡದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ.

ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list

ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.


ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.

ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ

ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ/farmer" ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು/Submit" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ

ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ

ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ

]]>
Sun, 30 Mar 2025 10:43:52 +0530 shivuagrico
Bele parihara rejected list&ಇನ್ನೂ 60 ರಿಂದ 70% ರೈತರಿಗೆ ತಲುಪದ ಬೆಳೆಪರಿಹಾರ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ https://krushirushi.in/Bele-parihara-rejected-list-1981 https://krushirushi.in/Bele-parihara-rejected-list-1981 Bele parihara rejected list-ಇನ್ನೂ 60 ರಿಂದ 70% ರೈತರಿಗೆ ತಲುಪದ ಬೆಳೆಪರಿಹಾರ

ರಾಜ್ಯ ಸರ್ಕಾರ ಒಟ್ಟು 34.50 ಲಕ್ಷ ರೈತರಿಗೆ ಬೆಳೆ ನಷ್ಟ ಪರಿಹಾರ ಕೊಟ್ಟಂತಾಗಲಿದೆ. ಆದರೆ ಶೇ.60 ರಿಂದ 70 ರೈತರು ಬಿಟ್ಟು ಹೋಗಿದ್ದಾರೆ. ಪರಿಹಾರ ಪಡೆದವರಿಗಿಂತ ವಂಚಿತರೇ ಹೆಚ್ಚು ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಸ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಪ್ರತಿ ಹೆಕ್ಟೇರ್ ಖುಷ್ಕಿ ಬೆಳೆಗೆ 8,300 ರೂ., ನೀರಾವರಿ- 17,000 ತೋಟಗಾರಿಕೆ ಬೆಳೆಗೆ 22,500 ರೂ. ನಿಗದಿಪಡಿಸಿ, ಗರಿಷ್ಠ ಎರಡು ಹೆಕ್ಟೇರ್ಗೆ ನೀಡಿದ್ದು, ರೈತರು ಹೂಡಿದ ಬಂಡವಾಳಕ್ಕೆ ಹೋಲಿಸಿದರೆ ಭಿಕ್ಷೆ ಹಾಕಿದಂತಿದೆ. ಕೇಂದ್ರದ ಜತೆಗೆ ರಾಜ್ಯ ಸರ್ಕಾರವೂ ತನ್ನ ಪಾಲಿನ ಮೊತ್ತ ಸೇರಿಸಿದ್ದರೆ ಒಂದಿಷ್ಟು ಪ್ರಯೋಜನವಾಗುತ್ತಿತ್ತು. ಕಿಸಾನ್ ಸಮ್ಮಾನ್ ನಿಧಿಯಡಿ 4000 ರೂ. ಕೊಡುವುದನ್ನು ಮುಂದುವರಿಸಿದ್ದರೆ ಕಷ್ಟ ಕಾಲದಲ್ಲಿ ಆಸರೆಯಾಗುತ್ತಿತ್ತು ಎನ್ನುವುದು ರೈತರ ವೇದನೆಯಾಗಿದೆ.

ತಿರಸ್ಕೃತ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment failed cases select ಮಾಡಿ Get reports ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಈ ಕೆಳಗಿನಂತೆ ಪರಿಹಾರ ವಿಫಲ ಪ್ರಕರಣಗಳ ಪಟ್ಟಿ ದೊರೆಯಲಿದೆ

ಅದೇ ರೀತಿ payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

]]>
Sun, 30 Mar 2025 05:35:54 +0530 shivuagrico
Bele parihara list 2024&25:ಯುಗಾದಿ ಹಬ್ಬಕ್ಕೆ ಸಿಹಿಸುದ್ದಿ ಕೊಟ್ಟ ರಾಜ್ಯ ಸರ್ಕಾರ,ಈ ದಿನ ಬಿಡುಗಡೆಯಾಗಲಿದೆ ಈ ಪಟ್ಟಿಯಲ್ಲಿರುವವರಿಗೆ ಬೆಳೆ ಪರಿಹಾರ https://krushirushi.in/Bele-parihara-list-2024-25-1980 https://krushirushi.in/Bele-parihara-list-2024-25-1980 Bele parihar list 2024-25:ಈ ದಿನ ಬಿಡುಗಡೆಯಾಗಲಿದೆ ಈ ಪಟ್ಟಿಯಲ್ಲಿರುವವರಿಗೆ ಬೆಳೆ ಪರಿಹಾರ

ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ ಪರಿಹಾರ ಪಾವತಿಸಲು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ನಿರ್ದೇಶಕರು, ಕೆ ಎಸ್ ಎನ್ ಡಿ ಸಿ ಅವರಿಗೆ ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ. ಈ ಮೂಲಕ ನೆರೆಹಾನಿಯಿಂದ ಬೆಳೆಹಾನಿಗೊಂಡ ರೈತರಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಕೇಂದ್ರ ಸರ್ಕಾರದ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 2024-25 ನೇ ಸಾಲಿನಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಕೇಂದ್ರ ಸರ್ಕಾರದಿಂದ 2 ನೇ ಕಂತಿನ ಅನುದಾನ ರೂ. 366.00 ಕೋಟಿಗಳನ್ನು ಮೇಲೆ ಓದಲಾದ (7) ರ ಪತ್ರದಲ್ಲಿ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುತ್ತದೆ. ಮೇಲೆ ಓದಲಾದ (8) ರ ಹಿಂಬರಹದಲ್ಲಿ ಆರ್ಥಿಕ ಇಲಾಖೆಯು 2 ನೇ ಕಂತಿನ ರಾಜ್ಯದ ಪಾಲು ರೂ. 122.00 ಕೋಟಿಗಳನ್ನು ಬಿಡುಗಡೆ ಮಾಡಿರುತ್ತದೆ.

ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

]]>
Sat, 29 Mar 2025 20:24:36 +0530 shivuagrico
Male munsuchane&ಏಪ್ರಿಲ್ 3ರವರೆಗೆ ಈ 12 ಜಿಲ್ಲೆಗಳಲ್ಲಿ ಮಳೆ ಅರ್ಭಟ https://krushirushi.in/Male-munsuchane- https://krushirushi.in/Male-munsuchane- Male munsuchane-ಏಪ್ರಿಲ್ 3ರವರೆಗೆ ಈ 12 ಜಿಲ್ಲೆಗಳಲ್ಲಿ ಮಳೆ ಅರ್ಭಟ

ಕರಾವಳಿ : ಕಾಸರಗೋಡು ಬಿಸಿಲು ಹಾಗೂ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 


ದಕ್ಷಿಣ ಕನ್ನಡದ ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ. ದ. ಕ. ಉಳಿದ ಭಾಗಗಳಲ್ಲಿ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 
ಈಗಿನಂತೆ ಎಪ್ರಿಲ್ 1 ಅಥವಾ 2ರಿಂದ ಮತ್ತೆ ಮಳೆ ಪ್ರಾರಂಭವಾಗುವ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಎಪ್ರಿಲ್ 2ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಮೈಸೂರು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 


ಈಗಿನಂತೆ ಎಪ್ರಿಲ್ 2ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. 

ಎಪ್ರಿಲ್ ಮೊದಲ ವಾರದಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯು ಆರಂಭವಾಗುವ ಲಕ್ಷಣಗಳಿವೆ.

]]>
Sat, 29 Mar 2025 18:10:19 +0530 shivuagrico
Aadhar based bele parihara&ನಿಮ್ಮ ಆಧಾರ್ ನಂಬರ್ ಹಾಕಿ ಬೆಳೆ ಪರಿಹಾರ ಜಮಾ ಚೆಕ್ ಮಾಡಿ https://krushirushi.in/Aadhar-based-bele-parihara-1979 https://krushirushi.in/Aadhar-based-bele-parihara-1979 Aadhar based bele parihara-ನಿಮ್ಮ ಆಧಾರ್ ನಂಬರ್ ಹಾಕಿ ಬೆಳೆ ಪರಿಹಾರ ಜಮಾ ಚೆಕ್ ಮಾಡಿ

ಕೇಂದ್ರ ಸರ್ಕಾರದ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 2024-25 ನೇ ಸಾಲಿನಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಕೇಂದ್ರ ಸರ್ಕಾರದಿಂದ 2 ನೇ ಕಂತಿನ ಅನುದಾನ ರೂ. 366.00 ಕೋಟಿಗಳನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುತ್ತದೆ ಹಾಗೂ ಆರ್ಥಿಕ ಇಲಾಖೆಯು 2 ನೇ ಕಂತಿನ ರಾಜ್ಯದ ಪಾಲು ರೂ. 122.00 ಕೋಟಿಗಳನ್ನು ಬಿಡುಗಡೆ ಮಾಡಿರುತ್ತದೆ.


ಮಳೆಯಾಶ್ರಿತ ಬೆಳೆಗೆ ಎರಡು ಹೆಕ್ಟರಿಗೆ ಸೀಮಿತವಾಗಿ ಪ್ರತಿ ಹೆಕ್ಟರಿಗೆ 8500 ರೂಪಾಯಿ ಪರಿಹಾರ ನೀಡಲಾಗುತ್ತದೆ.

 ನೀರಾವರಿ ಬೆಳೆಗೆ ಪ್ರತಿ ಹೆಕ್ಟರಿಗೆ 17000 ರೂಪಾಯಿ.

 ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟರಿಗೆ 22,000

 ರೇಷ್ಮೆ ಬೆಳೆಗೆ ಪ್ರತಿ ಹೆಕ್ಟರಿಗೆ 6000 ಪರಿಹಾರ ಮೊತ್ತ ನಿಗದಿಪಡಿಸಲಾಗಿದೆ

ಬೆಳೆ ಪರಿಹಾರ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://landrecords.karnataka.gov.in/PariharaPayment/

ನಂತರ ಆಧಾರ್ ನಂಬರ್ select ಮಾಡಿ

ನಂತರ calamity type "Flood" ಎಂದು ವರ್ಷ "2024-25" ಎಂದು select ಮಾಡಿ

ನಿಮ್ಮ ಆಧಾರ್ ನಂಬರ್ ಹಾಕಿ,Captch type ಮಾಡಿ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಬರಪರಿಹಾರ ಜಮಾ ತೋರಿಸುತ್ತದೆ

]]>
Sat, 29 Mar 2025 08:18:05 +0530 shivuagrico
Parihara payment&ರಾಜ್ಯ ಸರ್ಕಾರದಿಂದ 31 ಜಿಲ್ಲೆಗಳಿಗೆ ಬೆಳೆ ಪರಿಹಾರ ಬಿಡುಗಡೆ ಮಾಡಿ ಆದೇಶ, ಯಾವ ಜಿಲ್ಲೆಗೆ ಎಷ್ಟು ಹಣ ಬಿಡುಗಡೆ? https://krushirushi.in/Parihara-payment-1978 https://krushirushi.in/Parihara-payment-1978 Parihara payment-ರಾಜ್ಯ ಸರ್ಕಾರದಿಂದ 31 ಜಿಲ್ಲೆಗಳಿಗೆ ಬೆಳೆ ಪರಿಹಾರ ಬಿಡುಗಡೆ ಮಾಡಿ ಆದೇಶ, ಯಾವ ಜಿಲ್ಲೆಗೆ ಎಷ್ಟು ಹಣ ಬಿಡುಗಡೆ?

ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ ಪರಿಹಾರ ಪಾವತಿಸಲು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ನಿರ್ದೇಶಕರು, ಕೆ ಎಸ್ ಎನ್ ಡಿ ಸಿ ಅವರಿಗೆ ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ. ಈ ಮೂಲಕ ನೆರೆಹಾನಿಯಿಂದ ಬೆಳೆಹಾನಿಗೊಂಡ ರೈತರಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಈ ಸಂಬಂಧ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಿಂದ ಸ್ಥಳೀಯವಾಗಿ ಉಂಟಾಗುವ ಬೆಳೆ ಹಾನಿಗೆ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ: 11.07.2023 ರಂದು ಹೊರಡಿಸಿರುವ Revised Items of Expenditure and Norms of assistance from the State Disaster Response Fund (SDRF) ರ ಮಾರ್ಗಸೂಚಿಗಳನ್ವಯ ನಿಯಮಾನುಸಾರ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಪಾವತಿಸಬಹುದಾದ ಪರಿಹಾರ ಮೊತ್ತವನ್ನು ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಪರಿಹಾರ ತಂತ್ರಾಂಶದ ಮುಖಾಂತರ ಮಾತ್ರವೇ ನಿಯಮಾನುಸಾರ ಅರ್ಹ ರೈತ ಫಲಾನುಭವಿಗಳಿಗೆ ಅರ್ಹತೆಗನುಗುಣವಾಗಿ ಪಾವತಿಸಲು, ಕಾರ್ಯವಿಧಾನ ಹಾಗೂ ಷರತ್ತು ನಿಬಂಧನೆಗಳನ್ನು ಮೇಲೆ ಓದಲಾದ (1) ರ ಆದೇಶದಲ್ಲಿ ನಿಗದಿಪಡಿಸಲಾಗಿದೆ ಎಂದಿದ್ದಾರೆ.

ಮುಂಬರುವ ದಿನಗಳಲ್ಲಿ ನೈಸರ್ಗಿಕ ವಿಕೋಪಗಳಿಂದಾಗಿ ಉಂಟಾಗುವ ಮೂಲಭೂತ ಸೌಕರ್ಯಗಳ ಹಾನಿ ಹಾಗೂ ಬೆಳೆ ಹಾನಿಗಳಿಗೆ ನಿಯಮಾನುಸಾರ ಪರಿಹಾರ ಪಾವತಿಸಲು ಅನುದಾನ ಬಿಡುಗಡೆಗೊಳಿಸುವಂತೆ ಮೇಲೆ ಓದಲಾದ (2) ರಿಂದ (7) ರ ಪತ್ರಗಳಲ್ಲಿ, ಹಾಸನ, ಬೀದರ್, ಶಿವಮೊಗ್ಗ, ಧಾರವಾಡ, ಮೈಸೂರು ಹಾಗೂ ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಕೋರಿರುತ್ತಾರೆ.

ಕೇಂದ್ರ ಸರ್ಕಾರದ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 2024-25 ನೇ ಸಾಲಿನಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಕೇಂದ್ರ ಸರ್ಕಾರದಿಂದ 2 ನೇ ಕಂತಿನ ಅನುದಾನ ರೂ. 366.00 ಕೋಟಿಗಳನ್ನು ಮೇಲೆ ಓದಲಾದ (7) ರ ಪತ್ರದಲ್ಲಿ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುತ್ತದೆ. ಮೇಲೆ ಓದಲಾದ (8) ರ ಹಿಂಬರಹದಲ್ಲಿ ಆರ್ಥಿಕ ಇಲಾಖೆಯು 2 ನೇ ಕಂತಿನ ರಾಜ್ಯದ ಪಾಲು ರೂ. 122.00 ಕೋಟಿಗಳನ್ನು ಬಿಡುಗಡೆ ಮಾಡಿರುತ್ತದೆ.

ವಿವತ್ತು ನಿರ್ವಹಣೆಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರದ ಗ್ರಹ ಮಂತ್ರಾಲಯವು ಹೊರಡಿಸಿರುವ ಮಾರ್ಗಸೂಚಿಗಳನ್ವಯ ವಿಪತ್ತು ನಿರ್ವಹಣೆಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಿರ್ದೇಶಕರು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ರವರಿಗೆ ಹಾಗೂ ನೈಸರ್ಗಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ತಕ್ಷಣ ನಿಭಾಯಿಸಲು ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡುವುದು ಅವಶ್ಯಕವಾಗಿರುತ್ತದೆ.

ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಿರ್ದೇಶಕರು, ಕೆಎಸ್‌ಎನ್‌ಡಿಎಂಸಿ ರವರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯ ಲೆಕ್ಕ ಶೀರ್ಷಿಕೆ 2245-80-102-0-01-051 ರಲ್ಲಿ Oo.25.00 ಕೋಟಿಗಳ ಅನುದಾನ ಬಿಡುಗಡೆಗೊಳಿಸಲು ಹಾಗೂ ಮುಂದಿನ ದಿನಗಳಲ್ಲಿ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ ನಿಯಮಾನುಸಾರ ತಕ್ಷಣ ಸ್ಪಂದಿಸಲು ಹಾಗೂ ಭಾರತ ಸರ್ಕಾರದ ಗ್ರಹ ಮಂತ್ರಾಲಯವು ಹೊರಡಿಸಿರುವ ಮಾರ್ಗಸೂಚಿಗಳನ್ವಯ ಪರಿಹಾರವನ್ನು ಪಾವತಿಸಲು ಹಾಗೂ ತುರ್ತು ಕ್ರಮಗಳನ್ನು ಕೈಗೊಳ್ಳಲು ಅನುವಾಗುವಂತೆ ರಾಜ್ಯ ವಿಪತ್ತು ಪರಿಹಾರ ನಿಧಿಯ ಲೆಕ್ಕ ಶೀರ್ಷಿಕೆ 2245-80-102-0-01- 059 ರಲ್ಲಿ ಹಾಗೂ ಲೆಕ್ಕ ಶೀರ್ಷಿಕೆ 2245-80-102-0-01-140 ರಲ್ಲಿ ಲಭ್ಯವಿರುವ ಅನುದಾನದಿಂದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಅನುದಾನ ಬಿಡುಗಡೆಗೊಳಿಸಲು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಭಾರತ ಸರ್ಕಾರದ ಗ್ರಹ ಮಂತ್ರಾಲಯವು ಹೊರಡಿಸಿರುವ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ (Capacity Building) ಮಾರ್ಗಸೂಚಿಯನ್ವಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ರೂ. 25.00 ಕೋಟಿಗಳನ್ನು (ಇಪ್ಪತ್ತೈದು ಕೋಟಿಗಳು ಮಾತ್ರ) ನಿರ್ದೇಶಕರು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ರವರಿಗೆ ಲೆಕ್ಕ ಶೀರ್ಷಿಕೆ 2245-80-102-0-01-051 ರಲ್ಲಿ ಹಾಗೂ ಮುಂದಿನ ದಿನಗಳಲ್ಲಿ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ ನಿಯಮಾನುಸಾರ ತಕ್ಷಣ ಸ್ಪಂದಿಸಲು ಭಾರತ ಸರ್ಕಾರದ ಗ್ರಹ ಮಂತ್ರಾಲಯವು ಹೊರಡಿಸಿರುವ ಮಾರ್ಗಸೂಚಿಗಳನ್ವಯ ಪರಿಹಾರವನ್ನು ಪಾವತಿಸಲು ಹಾಗೂ ತುರ್ತು ಕ್ರಮಗಳನ್ನು ಕೈಗೊಳ್ಳಲು ಅನುವಾಗುವಂತೆ ಲೆಕ್ಕ ಶೀರ್ಷಿಕೆ 2245-80-102-0-01-059 ರಲ್ಲಿ ಹಾಗೂ ಲೆಕ್ಕ ಶೀರ್ಷಿಕೆ 2245-80-102-0-01-140 ರಲ್ಲಿ ಲಭ್ಯವಿರುವ ಅನುದಾನದಿಂದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಕೆಳಗಿನ ಷರತ್ತುಗಳ ಪಾಲನೆಗೊಳಪಟ್ಟು ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ.

 


Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

  

]]>
Sat, 29 Mar 2025 05:45:50 +0530 shivuagrico
Milk incentive&ರೈತರ ಖಾತೆಗೆ 600 ಕೋಟಿ ಹಾಲಿನ ಪ್ರೋತ್ಸಾಹಧನ ಬಿಡುಗಡೆ https://krushirushi.in/Milk-incentive-1975 https://krushirushi.in/Milk-incentive-1975 Milk incentive-ರೈತರ ಖಾತೆಗೆ 600 ಕೋಟಿ ಹಾಲಿನ ಪ್ರೋತ್ಸಾಹಧನ ಬಿಡುಗಡೆ

ರಾಜ್ಯದಲ್ಲಿ ಹೈನೋದ್ಯಮಕ್ಕೆ ವಿಶೇಷ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ರೈತರ ಆರ್ಥಿಕ ಸದೃಢತೆಗಾಗಿ ಹಾಲು ಉತ್ಪಾದನೆ ಮತ್ತು ಸಂಸ್ಕರಣಾ ವೆಚ್ಚಗಳನ್ನು ಪರಿಗಣಿಸಿ ನಂದಿನಿ ಹಾಲು ಮತ್ತು ಮೊಸರಿನ ದರ ಪರಿಷ್ಕರಣೆ ಮಾಡಲಾಗಿದೆ ಎಂಬುದಾಗಿ ಸರ್ಕಾರ ಸ್ಪಷ್ಟ ಪಡಿಸಿದೆ. 



ಮುಂಬರುವ ಏಪ್ರಿಲ್ 1ರಿಂದ ರಾಜ್ಯದಲ್ಲಿ ನಂದಿನಿ ಹಾಲಿನ ದರವು ₹4 ಹೆಚ್ಚಳವಾಗಲಿದ್ದು, ಇಲ್ಲಿ ಏರಿಕೆಯಾಗುವ ದರದ ಲಾಭವು ರೈತರನ್ನು ತಲುಪಲಿದೆ. ದರ ಏರಿಕೆಯ ನಂತರವೂ ಒಂದು ಲೀಟ‌ರ್ ಹಾಲಿನ ಬೆಲೆ ₹46 ಆಗಲಿದ್ದು, ಇದು ಬೇರೆಲ್ಲಾ ರಾಜ್ಯಗಳಿಗಿಂತಲೂ ಕಡಿಮೆಯಿರಲಿದೆ ಎಂದಿದೆ. 

ಈ ಹಿಂದೆ ಬಿಜೆಪಿ ಸರ್ಕಾರ 700 ಕೋಟಿ ರೂಪಾಯಿ ರೈತರ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿತ್ತು. ಅದನ್ನು ನಾವು ಬಿಡುಗಡೆ ಮಾಡಿದ್ದೇವೆ. ಈಗ ಏನೋ 600 ಕೋಟಿ ರೂಪಾಯಿ ಬಾಕಿ ಇದೆ ಅಂತ ಕೇಳಿದ್ದೇನೆ. ಆದಷ್ಟು ಬೇಗ ಬಾಕಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು.

Milk incentive status-ಇಲ್ಲಿಯವರೆಗೂ ಜಮಾ ಆಗಿರುವ ಹಾಲಿನ ಪ್ರೋತ್ಸಾಹಧನ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ "ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಪ್ರೋತ್ಸಾಹಧನ ಮಾಹಿತಿ ಸಿಗಲಿದೆ.

ಹೀಗೂ ಚೆಕ್ ಮಾಡಬಹುದು

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/Klda/MilkIncentive?ServiceId=5399&Type=TABLE&DepartmentId=3119

ನಂತರ ನಿಮ್ಮ ಜಿಲ್ಲೆ,ತಾಲೂಕು,Milk Union,ಗ್ರಾಮ, select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ನಿಮ್ಮ ಗ್ರಾಮದಲ್ಲಿ ಯಾರಿಗೆಲ್ಲಾ ಎಷ್ಟು ಹಾಲಿನ ಪ್ರೋತ್ಸಾಹಧನ(Milk incentive) ಬಂದಿದೆ ಎಂದು ತಿಳಿಯಲಿದೆ

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732

]]>
Fri, 28 Mar 2025 12:34:35 +0530 shivuagrico
Bele parihara&2.01 ಲಕ್ಷ ರೈತರ ಖಾತೆಗೆ 76.34 ಕೋಟಿ ಬೆಳೆ ಹಾನಿ ಪರಿಹಾರ ಜಮಾ https://krushirushi.in/Bele-parihara-1973 https://krushirushi.in/Bele-parihara-1973

Bele parihara-2.01 ಲಕ್ಷ ರೈತರ ಖಾತೆಗೆ 76.34 ಕೋಟಿ ಬೆಳೆ ಹಾನಿ ಪರಿಹಾರ ಜಮಾ

4.36 ಲಕ್ಷ ರೈತರು ತೊಗರಿ, ಹೆಸರು, ಉದ್ದು, ಸೋಯಾಬೀನ್ ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ, ಈ ಪೈಕಿ ಸ್ಥಳೀಯ ಪ್ರಕೃತಿ ವಿಕೋಪದಡಿ ದೂರುಗಳನ್ನು ಸಲ್ಲಿಸಿದ 2,01,847 ರೈತರಿಗೆ ಮಧ್ಯಂತರ ಪರಿಹಾರವಾಗಿ ರೂ. 76.34 ಕೋಟಿ ಪರಿಹಾರ ಈಗಾಗಲೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ರೈತವಾರು ಮಾಹಿತಿಯನ್ನು ಸಂರಕ್ಷಣಾ ಪೆೋರ್ಟನಲ್ಲಿ ದಾಖಲಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೀಯೇ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

2024-25 ನೇ ಸಾಲಿನಲ್ಲಿ ಅಗಸ್ಟ್ ಕೊನೆಯ ವಾರ ಹಾಗೂ ಸೆಪ್ಟಂಬರ್ ತಿಂಗಳ ಮೊದಲನೆ ವಾರದಲ್ಲಿ ಸುರಿದ ಹೆಚ್ಚಿನ ಮಳೆಯಿಂದಾಗಿ ಒಟ್ಟು 16373 ಹೆಕ್ಟೇರ್‍ನಷ್ಟು ಬೆಳೆ ಹಾನಿಯಾಗಿದ್ದು, ರಾಷ್ಟ್ರೀಯ ಹಾಗೂ ರಾಜ್ಯ ಬರ ಪರಿಹಾರ ನಿಧಿ ಮಾರ್ಗಸೂಚಿಯಂತೆ 35,086 ರೈತರಿಗೆ 13.47 ಕೋಟಿ ರೂ. ಪರಿಹಾರವನ್ನು ನೀಡಲಾಗಿದೆ ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.

Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Fri, 28 Mar 2025 05:56:57 +0530 shivuagrico
Yugadi good news&ಯುಗಾದಿ ಹಬ್ಬಕ್ಕೆ ರೈತರಿಗೆ ಡಬಲ್ ಗುಡ್ ನ್ಯೂಸ್ ಕೊಟ್ಟ ಕೃಷಿ ಸಚಿವ ಚೆಲುವರಾಯ ಸ್ವಾಮಿ https://krushirushi.in/Yugadi-good-news-1976 https://krushirushi.in/Yugadi-good-news-1976 Yugadi good news-ಯುಗಾದಿ ಹಬ್ಬಕ್ಕೆ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಕೃಷಿ ಸಚಿವ ಚೆಲುವರಾಯ ಸ್ವಾಮಿ

ಕೃಷಿ ಸಚಿವ ಚಲುವರಾಯಸ್ವಾಮಿ ಅವರು, ರೈತರಿಗೆ ಡಬಲ್‌ ಖುಷಿ ಸುದ್ದಿ ಕೊಟ್ಟಿದ್ದಾರೆ. ನಗರದಲ್ಲಿ ಇಂದು ನಡೆದ ಸಭೆಯಲ್ಲಿ ರಾಗಿ, ಜೋಳ, ತೊಗರಿಗೆ MSP ದರ ನಿಗದಿ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ. 


ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ, ರಾಗಿ, ಜೋಳ, ತೊಗರಿ ಖರೀದಿ ಮಾಡುತ್ತಿದ್ದೇವೆ. 7550 ರೂ. ತೊಗರಿಗೆ ಕೇಂದ್ರ ನಿಗದಿ ಮಾಡಿದೆ. ಇದಕ್ಕೆ 450 ರೂ. ಹೆಚ್ಚುವರಿ ಕೊಟ್ಟು ಖರೀದಿ ಮಾಡುತ್ತಿದ್ದೇವೆ. ಜಿಯೋ ಟ್ಯಾಗ್ ಕೊಟ್ಟು ಖರೀದಿ ಮಾಡಲಾಗುತ್ತೆ. ರಾಗಿಯನ್ನ 20 ಕ್ವಿಂಟಾಲ್‌ ನಿಂದ 30 ಕ್ವಿಂಟಾಲ್ ಖರೀದಿಗೆ ಮುಂದಾಗಿದ್ದೇವೆ ಎಂದು ಮಾಹಿತಿ ನೀಡಿದರು.

ಇನ್ನು ಇದೇ ವೇಳೆ ರೈತರಿಗೆ ಮತ್ತೊಂದು ಗುಡನ್ಯೂಸ್ ನೀಡಿದ್ದಾರೆ. ಬೆಂಗಳೂರಿನ ಕಾವೇರಿ ಆಸ್ಪತ್ರೆಯು CSR ಫಂಡ್ ನಲ್ಲಿ 100 ಜನ ರೈತರಿಗೆ ಮಂಡಿ ಚಿಪ್ಪು ಸಮಸ್ಯೆಗೆ ಉಚಿತ ಶಸ್ತ್ರ ಚಿಕಿತ್ಸೆ ಮಾಡಲು ಮುಂದಾಗಿದ್ದಾರೆ. 15 ಕೋಟಿ ರೂ. ವೆಚ್ಚದಲ್ಲಿ 100 ರಿಂದ 150 ಜನ ರೈತರಿಗೆ ಶಸ್ತ್ರ ಚಿಕಿತ್ಸೆ ಮಾಡುತ್ತೇವೆ. ರೋಬೋಟಿಕ್ ಮೂಲಕ ಚಿಕಿತ್ಸೆ ನೀಡುತ್ತಿದ್ದು, ಓರ್ವ ರೋಗಿಗೆ 3- 4 ಲಕ್ಷ ಆಗುತ್ತದೆ. ಆಯಾ ತಾಲ್ಲೂಕು, ಜಿಲ್ಲಾ ಹೆಡ್ ಕ್ವಾಟ್ರಸ್ ನಿಂದ ಪ್ರಕ್ರಿಯೆ ಶುರುವಾಗಲಿದೆ ಎಂದಿದ್ದಾರೆ. 
ಚಿಕಿತ್ಸೆ ಒಳಗಾಗುವವಿಗೆ ಬೇಕಾಗುವ ದಾಖಲೆಗಳು:-
ಆಧಾರ್ ಕಾರ್ಡ್ ಅಥವಾ ಗುರುತಿನ ಚೀಟಿ

MSP for bilijola-ಕನಿಷ್ಟ ಬೆಂಬಲ ಯೋಜನೆಯಡಿ ಬಿಳಿಜೋಳ ಖರೀದಿ,ಮಾರಾಟ,ಹಣ ಪಾವತಿಯ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಆದೇಶ ಮಾಡಿದೆ.


ಜಿಲ್ಲಾ ಟಾಸ್ಕ್‌ಫೋರ್ಸ್‌ಗಳ ಶಿಫಾರಸ್ಸಿನಂತೆ ವಿಜಯಪುರ, ಕಲಬುರಗಿ, ಬಾಗಲಕೋಟೆ, ಯಾದಗಿರಿ, ಬೀದರ್‌, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಬೆಳಗಾವಿ, ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ.

ರೈತಬಾಂಧವರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಬಿಳಿಜೋಳವನ್ನು ಮಾರಾಟ ಮಾಡದೇ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಸರ್ಕಾರದ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.

ಬೆಂಬಲ ಬೆಲೆ ಎಷ್ಟು?

ಹೈಬ್ರಿಡ್ ಜೋಳ ರೂ.3,371/- (ಪ್ರತಿ ಕ್ವಿಂಟಾಲ್ ಗೆ)
ಮಾಲ್ದಂಡಿ ಜೋಳ ರೂ.3,421/- (ಪ್ರತಿ ಕ್ವಿಂಟಾಲ್ಗೆ)
ಪ್ರತಿ ಎಕರೆಗೆ ನಿಗದಿಪಡಿಸಿರುವ ಪ್ರಮಾಣ : 20 ಕ್ವಿಂಟಾಲ್
ಪ್ರತಿ ರೈತರಿಂದ ಖರೀದಿ ಪ್ರಮಾಣ : 150 ಕ್ವಿಂಟಾಲ್

ಮಾರಾಟ ಹೇಗೆ?

ಫೂಟ್ಸ್ ಐ.ಡಿ. ಯೊಂದಿಗೆ ಬಯೋಮೆಟ್ರಿಕ್ ನೀಡಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿ. ಅಧಾರ್ ಜೋಡಣೆಯಾದ ಎನ್.ಸಿ.ಪಿ.ಐ. ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಖಾತರಿಪಡಿಸಿ. ಎಫ್.ಎ.ಕ್ಕೂ ಗುಣಮಟ್ಟದ ಬಗ್ಗೆ ಗ್ರೇಡರ್ ಪರಿಶೀಲಿಸಿ ದೃಢೀಕರಿಸಿದ ನಂತರ ಖರೀದಿ.ಮದ್ಯವರ್ತಿಗಳು ಖರೀದಿ ಕೇಂದ್ರಗಳನ್ನು ದುರ್ಬಳಕೆ ಮಾಡಿಕೊಂಡರೆ ಕಾನೂನು ಕ್ರಮ ಜರುಗಿಸಲಾಗುವುದು.

ಹಣ ಪಾವತಿ ಹೇಗೆ?
ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ಹಣ ನೇರವಾಗಿ ಜಮೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಉಚಿತ ದೂರವಾಣಿ ಸಂಖ್ಯೆಗೆ 1800 425 1552 ಕರೆ ಮಾಡಬಹುದಾಗಿದೆ.

]]>
Thu, 27 Mar 2025 23:42:00 +0530 shivuagrico
Weather forecast&ಯುಗಾದಿಗೆ ಮುನ್ನವೆ ಭಾರಿ ಮಳೆ,ಗುಡುಗು ಸಹಿತ ವರುಣನ ಅರ್ಭಟ https://krushirushi.in/Weather-forecast-1972 https://krushirushi.in/Weather-forecast-1972 Weather forecast-ಯುಗಾದಿಗೆ ಮುನ್ನವೆ ಭಾರಿ ಮಳೆ,ಗುಡುಗು ಸಹಿತ ವರುಣನ ಅರ್ಭಟ

ಕರಾವಳಿ : ಕಾಸರಗೋಡು ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಗುಡುಗು ಸಹಿತ ಒಂದೆರಡು ಕಡೆ ಸಂಜೆ, ರಾತ್ರಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಗುಡುಗು ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ
ಈಗಿನಂತೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಪ್ರಿಲ್ 3ರಿಂದ ಮತ್ತೆ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಹಾಸನದ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗಿನೊಂದಿಗೆ ತುಂತುರು ಮಳೆ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಪ್ರಿಲ್ 3ರಿಂದ ಮತ್ತೆ ಚುರುಕಾಗುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ದಕ್ಷಿಣ ಒಳನಾಡಿನ ಚಾಮರಾಜನಗರದ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ 
ಈಗಿನಂತೆ ಎಪ್ರಿಲ್ 3ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

]]>
Thu, 27 Mar 2025 19:30:08 +0530 shivuagrico
Bele vime&2.36 ಲಕ್ಷ ರೈತರ ಖಾತೆಗೆ 667.73 ಕೋಟಿ ಬೆಳೆ ವಿಮೆ ಹಣ ಜಮಾ,ನಿಮಗೇಷ್ಟು ಜಮಾ ಚೆಕ್ ಮಾಡಿ https://krushirushi.in/Bele-vime-1971 https://krushirushi.in/Bele-vime-1971 Bele vime-2.36 ಲಕ್ಷ ರೈತರ ಖಾತೆಗೆ 667.73 ಕೋಟಿ ಬೆಳೆ ವಿಮೆ ಹಣ ಜಮಾ

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Wed, 26 Mar 2025 19:44:53 +0530 shivuagrico
Gruhalakshmi list&ಈ ಪಟ್ಟಿಯಲ್ಲಿರುವವರಿಗೆ ಯುಗಾದಿಯ ನಂತರ ಒಟ್ಟಿಗೆ ಜಮಾ ಆಗಲಿದೆ 2 ಕಂತಿನ ಹಣ https://krushirushi.in/Gruhalakshmi-list-1970 https://krushirushi.in/Gruhalakshmi-list-1970 ಈ ಪಟ್ಟಿಯಲ್ಲಿರುವವರಿಗೆ ಯುಗಾದಿಯ ನಂತರ ಒಟ್ಟಿಗೆ ಜಮಾ ಆಗಲಿದೆ 2 ಕಂತಿನ ಹಣ


ಕಳೆದ ಕೆಲವು ದಿನಗಳ ಹಿಂದೆ ಗೃಹಲಕ್ಷ್ಮಿ ಯೋಜನೆಯ(Gruhalakshmi yojane) ಹಣ 2 ತಿಂಗಳ ಹಿಂದಿನ ಕಂತು ಜಮೆ ಆಗಿತ್ತು. ಆದರೆ ಇತ್ತೀಚಿನ 2 ಕಂತುಗಳ ಹಣ ಇನ್ನು ಜಮೆ ಆಗಿಲ್ಲ ಎಂಬುದು ಯಜಮಾನಿಯರ ಆರೋಪವಾಗಿದೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರು ಇನ್ನೊಂದು ವಾರ ಅಂದರೆ ಮಾರ್ಚ್ 31ರ ಬಳಿಕ 2 ಕಂತುಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ

ಹೌದು ಈ ಕುರಿತು ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ಬಳಿಕ ಅಂದರೆ ಇನ್ನೊಂದು ವಾರ ಬಿಟ್ಟು ಹಾಕಲಾಗುತ್ತದೆ. ಈಗಾಗಲೇ ಹಿಂದಿನ 2 ಕಂತುಗಳ ಹಣ ಖಾತೆಗೆ ಹಾಕಲಾಗಿದೆ. ಇನ್ನು ಉಳಿದ 2 ಕಂತುಗಳ ಹಣವನ್ನು ಮಾರ್ಚ್ 31 ರ ನಂತರ ಅಕೌಂಟಿಗೆ ಹಾಕಲಾಗುತ್ತದೆ ಎಂದು ಅವರು ಸ್ಪಷ್ಟನೆ ನೀಡಿದರು.

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Wed, 26 Mar 2025 18:58:44 +0530 shivuagrico
ಉಚಿತ ಊಟ ವಸತಿಯೊಂದಿಗೆ 10 ದಿನಗಳ ಹೈನುಗಾರಿಕೆ,ಎರೆಹುಳು ಗೊಬ್ಬರ ತಯಾರಿಕೆ ತರಭೇತಿ&Free dairy vermicompost training https://krushirushi.in/Free-dairy-vermicompost-training-1969 https://krushirushi.in/Free-dairy-vermicompost-training-1969 ಉಚಿತ ಊಟ ವಸತಿಯೊಂದಿಗೆ 10 ದಿನಗಳ ಹೈನುಗಾರಿಕೆ,ಎರೆಹುಳು ಗೊಬ್ಬರ ತಯಾರಿಕೆ ತರಭೇತಿ-Free dairy vermicompost training 


ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ ಹತ್ತು ದಿನಗಳ ಕಾಲ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಯನ್ನು ದಿನಾಂಕ 15/4/2025 ರಿಂದ 24/4/2025 ವರೆಗೆ ಹಮ್ಮಿಕೊಳ್ಳಲಾಗಿದೆ.


ತರಬೇತಿಯಲ್ಲಿ ಕಲಿಸುವ ವಿಷಯಗಳು 

1)ಹೈನು ರಾಸು ತಳಿಗಳು 
2)ಹೈನು ರಾಸುಗಳಿಗೆ ಬರುವಂತಹ ವಿವಿಧ ರೋಗಗಳು 
3)ಕೃತಕ ಗರ್ಭದಾರಣೆ 
4) ಕರುಗಳ ಪಾಲನೆ ಪೋಷಣೆ 
5)ವಿವಿಧ ಔಷಧ ಉಪಚಾರಗಳು 
6)ಆಕಳು ಶಡ್ ನಿರ್ಮಾಣ
7) ಗರ್ಭಧರಿಸಿದ ರಾಸುಗಳ ಪಾಲನೆ ಪೋಷಣೆ 
8) ಸಾವಯುವ ಕೃಷಿ ಪದ್ಧತಿ 
9) ಎರೆಹುಳು ಘಟಕ ನಿರ್ಮಾಣ, ಎರೆ ಹುಳುಗಳ ವಿಧಗಳು, ಗೊಬ್ಬರ ತಯಾರಿಸುವ ವಿಧಾನ 
10) ಸೂಕ್ತ ಆಹಾರ ಕ್ರಮಗಳು 
11)ಲೋನ್ ಗಳ ಮಾಹಿತಿ,ಸಬ್ಸಿಡಿಗಳ ಮಾಹಿತಿ, ಪ್ರಾಜೆಕ್ಟ್ ರಿಪೋರ್ಟ್ ಮಾಹಿತಿ 

 ಇನ್ನು ಇತರೆ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು 

 ಆಸಕ್ತರು ಕೂಡಲೇ ಕೆಳಗಡೆ ನಮೂದಿಸಿದ ಮೊಬೈಲ್ ನಂಬರ್ ಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಿ 
8660219375

]]>
Wed, 26 Mar 2025 14:27:37 +0530 shivuagrico
ಉಚಿತ ಹಾಲು ಕರೆಯುವ ಯಂತ್ರ,ರಬ್ಬರ್ ಮ್ಯಾಟ್,ಸೈಲೆಜ್ ಬ್ಯಾಗ್ ವಿತರಣೆಗೆ ಅರ್ಜಿ ಆಹ್ವಾನ&Free milking machine,cow mat,silage bag https://krushirushi.in/Free-milking-machine-cow-mat-silage-bag-1968 https://krushirushi.in/Free-milking-machine-cow-mat-silage-bag-1968 ಉಚಿತ ಹಾಲು ಕರೆಯುವ ಯಂತ್ರ,ರಬ್ಬರ್ ಮ್ಯಾಟ್,ಸೈಲೆಜ್ ಬ್ಯಾಗ್ ವಿತರಣೆಗೆ ಅರ್ಜಿ ಆಹ್ವಾನ-Free milking machine,cow mat,silage bag


2024-25 ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿಯಲ್ಲಿ ಹಾಲು ಕರೆಯುವ ಯಂತ್ರ(Milking machine), ರಬ್ಬರ್ ನೆಲಹಾಸು(Rubber mat) ಹಾಗೂ ಸೈಲೇಜ್ ಬ್ಯಾಗ್ಗಳನ್ನು(Silage bag) ವಿತರಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ(Vetarnary department)ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಾಲು ಕರೆಯುವ ಯಂತ್ರ  ತಲಾ 1 ರಂತೆ, ರಬ್ಬರ್ ನೆಲಹಾಸು ತಲಾ 2 ರಂತೆ ಹಾಗೂ ಸೈಲೇಜ್ ಬ್ಯಾಗ್ ತಲಾ 100 ಕೆಜಿ ಸಾಮರ್ಥ್ಯದ 1 ಹಾಗೂ 500 ಕೆಜಿ ಸಾಮರ್ಥ್ಯದ 1 ಬ್ಯಾಗ್ ಅನ್ನು ನೀಡಲಾಗುತ್ತದೆ. ಸದರಿ ಫಲಾನುಭವಿಗಳ ಆಯ್ಕೆಯಲ್ಲಿ ರೋಸ್ಟರ್ ನಿಯಾಮಾನುಸಾರದ ಕ್ರಮ ವಹಿಸಲಿದ್ದು, ಆಸಕ್ತರು ತಮ್ಮ ಸ್ಥಳೀಯ ಪಶುವೈದ್ಯಾಧಿಕಾರಿಗಳಿಂದ/ಮುಖ್ಯ ಪಶುವೈದ್ಯಾಧಿಕಾರಿಗಳು ಇವರಿಂದ ಅರ್ಜಿ ನಮೂನೆಯನ್ನು ಪಡೆದು ಎಲ್ಲಾ ದಾಖಲಾತಿಗಳೊಂದಿಗೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮುಖ್ಯ ಪಶು ವೈದ್ಯಾಧಿಕಾರಿಗಳ ಈ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming 

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು(Cow) ಅಥವಾ ಎಮ್ಮೆ(Buffelow) ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್‌ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.


ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Vetarnary department schemes 2025-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?

ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ


ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.

ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.


ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು

ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.


ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.


ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.

ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.


ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.

ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.


ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahvs.karnataka.gov.in/info-2/Schemes+&+Benefits/kn

National livestock mission 2024-ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆ,ಕುರಿ,ಕೋಳಿ,ಮೇಕೆ,ಹಂದಿ ಸಾಕಾಣೆಕೆಗೆ ಅರ್ಜಿ ಆಹ್ವಾನ

ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ, ಮೇಕೆ, ಹಂದಿ ಸಾಕಾಣಿಕೆ ಮತ್ತು ರಸಮೇವು ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.

National livestock mission 


ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ

(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)


 ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.


 ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.

ಅವಶ್ಯಕ ದಾಖಲಾತಿಗಳು :-

1)ಆಧಾರ,

2)ಪಹಣಿ ಪತ್ರ

3)ಬ್ಯಾಂಕ್‌ಖಾತೆ ಸಂಖ್ಯೆ,

ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು

4)ಭಾವ ಚಿತ್ರ.



ಕ್ರ.ಸಂ 

ಘಟಕ 

ಸೌಲಭ್ಯಗಳ ವಿವರ

 

 ಹೈನುಗಾರಿಕೆ 

 

1

ಮಿಶ್ರತಳಿ ದನಗಳ ನಿರ್ವಹಣೆ (1+1)

ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ

 

ಆ. ಸುಧಾರಿತ ಎಮ್ಮೆಗಳ ನಿರ್ವಹಣೆ 
 (1+1)

ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ

 

 ಕುರಿ ಸಾಕಾಣಿಕೆ 

 

2

ಕುರಿಗಳ ನಿರ್ವಹಣೆ (10+01)

 ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ

 

ಕುರಿಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ

 

ಟಗರುಗಳ ನಿರ್ವಹಣೆ (10)

ರೂ. 13,000 ರಂತೆ ಸಾಲ ಸೌಲಭ್ಯ

 

 ಟಗರುಗಳ ನಿರ್ವಹಣೆ (20)

ರೂ. 26,000 ರಂತೆ ಸಾಲ ಸೌಲಭ್ಯ

 

ಮೇಕೆ ಸಾಕಾಣಿಕೆ 

 

3

ಮೇಕೆಗಳ ನಿರ್ವಹಣೆ (10+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ

 

ಮೇಕೆಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ

4

ಹಂದಿ ಸಾಕಾಣಿಕೆ (10)

ರೂ,60,000 ರಂತೆ ಸಾಲ ಸೌಲಭ್ಯ

 

           ಕೋಳಿ ಸಾಕಾಣಿಕೆ 

 

5

ಮಾಂಸದ ಕೋಳಿ ಸಾಕಾಣಿಕೆ

2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ

 

 ಮೊಟ್ಟೆ ಕೋಳಿ ಸಾಕಾಣಿಕೆ

1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.

ಈ ಮಾಹಿತಿ ನಿಮಗೆ ಉಪಯೋಗವಾಗಿದ್ದರೆ ಬೇರೆಯವರಿಗೂ ಹಂಚಿಕೊಳ್ಳಿ ಧನ್ಯವಾದಗಳು

]]>
Wed, 26 Mar 2025 05:59:19 +0530 shivuagrico
Bele parihara&ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್, ಬೆಳೆ ವಿಮೆ ಪರಿಹಾರ ಖಾತೆಗೆ ನೇರ ಜಮೆ https://krushirushi.in/Bele-parihara-1967 https://krushirushi.in/Bele-parihara-1967 Bele parihara-ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್, ಬೆಳೆ ವಿಮೆ ಪರಿಹಾರ ಖಾತೆಗೆ ನೇರ ಜಮೆ

ತೊಗರಿ, ಹೆಸರು, ಉದ್ದು, ಸೋಯಾಬೀನ್ ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆದಿದ್ದ ಕಲಬುರಗಿ ಜಿಲ್ಲೆಯ 2,04,073 ರೈತರು ಬೆಳೆ ವಿಮೆ ಯೋಜನೆಯಡಿ ವಿಮೆ ಪರಿಹಾರ ಕೋರಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೋಂದಾವಣೆ ಮಾಡಿಕೊಂಡಿದ್ದು 575.194 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಹಾಗೂ ಬೆಳೆಹಾನಿ ಸೇರಿದಂತೆ 2,36,933 ರೈತರಿಗೆ ಒಟ್ಟು ರೂ. 667.73 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ, ರಾಜ್ಯ ಸರ್ಕಾರದಿಂದ ಜಿಲ್ಲೆಯ ರೈತರಿಗೆ ಇಷ್ಟು ದೊಡ್ಡ ಮೊತ್ತದ ಬೆಳೆ ವಿಮೆ ಪರಿಹಾರ ನೀಡುವ ಮೂಲಕ ದಾಖಲೆ ಸೃಷ್ಟಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

ಜಿಲ್ಲೆಯಲ್ಲಿ 4.36 ಲಕ್ಷ ರೈತರು ತೊಗರಿ, ಹೆಸರು, ಉದ್ದು, ಸೋಯಾಬೀನ್ ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ, ಈ ಪೈಕಿ ಸ್ಥಳೀಯ ಪ್ರಕೃತಿ ವಿಕೋಪದಡಿ ದೂರುಗಳನ್ನು ಸಲ್ಲಿಸಿದ 2,01,847 ರೈತರಿಗೆ ಮಧ್ಯಂತರ ಪರಿಹಾರವಾಗಿ ರೂ. 76.34 ಕೋಟಿ ಪರಿಹಾರ ಈಗಾಗಲೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ರೈತವಾರು ಮಾಹಿತಿಯನ್ನು ಸಂರಕ್ಷಣಾ ಪೆೋರ್ಟನಲ್ಲಿ ದಾಖಲಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೀಯೇ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

2024-25 ನೇ ಸಾಲಿನಲ್ಲಿ ಅಗಸ್ಟ್ ಕೊನೆಯ ವಾರ ಹಾಗೂ ಸೆಪ್ಟಂಬರ್ ತಿಂಗಳ ಮೊದಲನೆ ವಾರದಲ್ಲಿ ಸುರಿದ ಹೆಚ್ಚಿನ ಮಳೆಯಿಂದಾಗಿ ಒಟ್ಟು 16373 ಹೆಕ್ಟೇರ್‍ನಷ್ಟು ಬೆಳೆ ಹಾನಿಯಾಗಿದ್ದು, ರಾಷ್ಟ್ರೀಯ ಹಾಗೂ ರಾಜ್ಯ ಬರ ಪರಿಹಾರ ನಿಧಿ ಮಾರ್ಗಸೂಚಿಯಂತೆ 35,086 ರೈತರಿಗೆ 13.47 ಕೋಟಿ ರೂ. ಪರಿಹಾರವನ್ನು ನೀಡಲಾಗಿದೆ ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.

Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Tue, 25 Mar 2025 01:18:35 +0530 shivuagrico
Ration card thiddupadi&ರೇಷನ್ ಕಾರ್ಡ್ ತಿದ್ದುಪಡಿಗೆ ಮಾರ್ಚ್ 31 ಕೊನೆಯ ದಿನಾಂಕ, ರೇಷನ್ ಕಾರ್ಡ್ ನಂಬರ್ ಹಾಕಿ ತಿದ್ದುಪಡಿ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Ration-card-thiddupadi-1966 https://krushirushi.in/Ration-card-thiddupadi-1966 Ration card thiddupadi-ರೇಷನ್ ಕಾರ್ಡ್ ತಿದ್ದುಪಡಿಗೆ ಮಾರ್ಚ್ 31 ಕೊನೆಯ ದಿನಾಂಕ

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮಾರ್ಚ್ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ.

ಮಾರ್ಚ್ 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.

ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. https://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ.

ಸದಸ್ಯರ ಸೇರ್ಪಡೆ

* ಪೋಟೋ ಬದಲಾವಣೆ

* ಹೆಸರು ಡಿಲೆಟ್

* ಅಂಗಡಿ. ನಂ. ಬದಲಾವಣೆ

* ಹೆಸರು ತಿದ್ದುಪಡಿ

* ಮುಖ್ಯಸ್ಥರ ಬದಲಾವಣೆ

ಅರ್ಜಿ ಸಲ್ಲಿಸಲು ದಾಖಲಾತಿಗಳು

1. ಸದಸ್ಯರ ಆಧಾರ ಕಾರ್ಡ್ ಕಡ್ಡಾಯ

2. ಸದಸ್ಯರ ಜಾತಿ ಮತ್ತು ಆದಾಯ 6 ವರ್ಷ ಮೆಲ್ಪಟ್ಟವರಿಗೆ

3. ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ.

ರೇಷನ್ ಕಾರ್ಡ್ ನಲ್ಲಿ ಹೆಂಡತಿ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಮದುವೆ ಪ್ರಮಾಣ ಪತ್ರ

ಪೋಷಕರ ಪಡಿತರ ಚೀಟಿ ಅಗತ್ಯ.

ಪಡಿತರ ಚೀಟಿಗೆ ಮಗುವಿನ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ

ಮಗುವಿನ ಜನನ ಪ್ರಮಾಣಪತ್ರ

ಹೆತ್ತವರ ಆಧಾರ್ ಕಾರ್ಡ್

ಈ ಪ್ರಕ್ರಿಯೆಯನ್ನು ಅನುಸರಿಸಿ

ಆನ್‌ಲೈನ್‌ನಲ್ಲಿ ಪಡಿತರ ಚೀಟಿಗೆ ನಿಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಸೇರಿಸಲು, ನೀವು ನಿಮ್ಮ ರಾಜ್ಯದ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಇದರ ನಂತರ ನೀವು ID ಅನ್ನು ರಚಿಸಬೇಕಾಗುತ್ತದೆ. ನಿಮ್ಮ ಐಡಿಯನ್ನು ಈಗಾಗಲೇ ರಚಿಸಿದ್ದರೆ ನೀವು ಲಾಗಿನ್ ಆಗಬೇಕು. ಇದರ ನಂತರ ನಿಮ್ಮ ಪಡಿತರ ಚೀಟಿಯ ವಿವರಗಳನ್ನು ನೀವು ನೋಡುತ್ತೀರಿ, ಅದರಲ್ಲಿ ನೀವು ಹೊಸ ಸದಸ್ಯರನ್ನು ಸೇರಿಸುವ ಆಯ್ಕೆಯನ್ನು ಪಡೆಯುತ್ತೀರಿ. ನೀವು ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ, ಇದರ ನಂತರ ನೀವು ಹೊಸ ಸದಸ್ಯರನ್ನು ಸೇರಿಸಲು ಫಾರ್ಮ್ ಅನ್ನು ಭರ್ತಿ ಮಾಡಬೇಕಾಗುತ್ತದೆ.

ಅದರೊಂದಿಗೆ ಹೊಸ ಸದಸ್ಯರ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಬೇಕು. ನಂತರ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ವಿವರಗಳು ಮತ್ತು ದಾಖಲೆಗಳನ್ನು ಭರ್ತಿ ಮಾಡಿದ ನಂತರ, ನೀವು ಫಾರ್ಮ್ ಅನ್ನು ಸಲ್ಲಿಸಬೇಕು. ಫಾರ್ಮ್ ಅನ್ನು ಸಲ್ಲಿಸಿದ ನಂತರ, ನಿಮ್ಮ ನೋಂದಣಿ ಸಂಖ್ಯೆಯನ್ನು ನೀವು ಪಡೆಯುತ್ತೀರಿ. ನೋಂದಣಿ ಸಂಖ್ಯೆಯೊಂದಿಗೆ ನಿಮ್ಮ ವಿನಂತಿಯನ್ನು ನೀವು ಟ್ರ್ಯಾಕ್ ಮಾಡಬಹುದು. ಇದರ ನಂತರ ನಿಮ್ಮ ಫಾರ್ಮ್ ಮತ್ತು ನಿಮ್ಮ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಎಲ್ಲವೂ ಸರಿಯಾಗಿದ್ದರೆ ಹೊಸ ಸದಸ್ಯರ ಹೆಸರನ್ನು ಪಡಿತರ ಚೀಟಿಗೆ ಸೇರಿಸಲಾಗುವುದು. ಹತ್ತಿರದ ಪಡಿತರ ಅಂಗಡಿಗೆ ಹೋಗುವ ಮೂಲಕ ನಿಮ್ಮ ಪಡಿತರ ಚೀಟಿಯಲ್ಲಿ ನಿಮ್ಮ ಹೆಸರನ್ನು ನವೀಕರಿಸಬಹುದು.

ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾ‌ರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home  ಭೇಟಿ ನೀಡಿ

ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.

ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.

ಹೊಸ ಪೇಜ್ ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನಲೋಡ್ ಮಾಡಿ.

ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.

ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.

Ration card thiddupadi status-ರೇಷನ್ ಕಾರ್ಡ್ ತಿದ್ದುಪಡಿಗೆ ಡಿಸೆಂಬರ್ 31ರವರೆಗೆ ಅವಕಾಶ,ರೇಷನ್ ಕಾರ್ಡ್ ನಂಬರ್ ಹಾಕಿ ತಿದ್ದುಪಡಿ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ e-status ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ Amendment requests ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ಪಡಿತರ ಚೀಟಿಯ ಬದಲಾವಣೆ ಕೋರಿಕೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಅಥವಾ Acknowledgment ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ಆಹಾರ ಇಲಾಖೆಗೆ ಸಲ್ಲಿಸಲಾಗಿದೆ ಹಾಗೂ ಆಹಾರ ನೀರಿಕ್ಷರಿಂದ ಪ್ರಕ್ರಿಯೆಗೆ ಕಾಯುತ್ತಿದೆ ಎಂದು ತೋರಿಸಿದರೆ ನಿಮ್ಮ ತಿದ್ದುಪಡಿ ಅರ್ಜಿ ಇನ್ನೂ ಬಾಕಿ ಇದೆ ಎಂದು ಅರ್ಥ

ಈ ಕೆಳಗಿನಂತೆ ತೋರಿಸಿದರೆ ನಿಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಅರ್ಥ


(ಸೂಚನೆ-ಆಹಾರ ವೆಬ್ಲೈಟ್ ಓಪನ್ ಆಗದಿದ್ದರೆ,10 ಗಂಟೆಯ ನಂತರ ಪ್ರಯತ್ನಿಸಿ)

]]>
Mon, 24 Mar 2025 20:00:09 +0530 shivuagrico
ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ&Aadhaar not linked croploss farmers list https://krushirushi.in/Aadhaar-not-linked-croploss-farmers-list-1965 https://krushirushi.in/Aadhaar-not-linked-croploss-farmers-list-1965 ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ-Aadhaar not linked croploss farmers list

15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635 

ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/AadharNotSeededReport.aspx

ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ

Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ - https://krushirushi.in/Tahasildar-varification-status-approved-1634

]]>
Sun, 23 Mar 2025 23:26:29 +0530 shivuagrico
Gruhalakshmi list&ಇದೇ ದಿನ ಜಮಾ ಆಗಲಿದೆ ಈ ಪಟ್ಟಿಯಲ್ಲಿರುವವರಿಗೆ 2 ತಿಂಗಳ ಗೃಹಲಕ್ಷ್ಮಿ ಹಣ https://krushirushi.in/Gruhalakshmi-list-1964 https://krushirushi.in/Gruhalakshmi-list-1964 Gruhalakshmi list-ಈ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ ಮಾರ್ಚ್ 31ರ ಬಳಿಕ 2 ತಿಂಗಳ ಗೃಹಲಕ್ಷ್ಮಿ ಹಣ


ಕಳೆದ ಕೆಲವು ದಿನಗಳ ಹಿಂದೆ ಗೃಹಲಕ್ಷ್ಮಿ ಯೋಜನೆಯ(Gruhalakshmi yojane) ಹಣ 2 ತಿಂಗಳ ಹಿಂದಿನ ಕಂತು ಜಮೆ ಆಗಿತ್ತು. ಆದರೆ ಇತ್ತೀಚಿನ 2 ಕಂತುಗಳ ಹಣ ಇನ್ನು ಜಮೆ ಆಗಿಲ್ಲ ಎಂಬುದು ಯಜಮಾನಿಯರ ಆರೋಪವಾಗಿದೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರು ಇನ್ನೊಂದು ವಾರ ಅಂದರೆ ಮಾರ್ಚ್ 31ರ ಬಳಿಕ 2 ಕಂತುಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ

ಹೌದು ಈ ಕುರಿತು ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ಬಳಿಕ ಅಂದರೆ ಇನ್ನೊಂದು ವಾರ ಬಿಟ್ಟು ಹಾಕಲಾಗುತ್ತದೆ. ಈಗಾಗಲೇ ಹಿಂದಿನ 2 ಕಂತುಗಳ ಹಣ ಖಾತೆಗೆ ಹಾಕಲಾಗಿದೆ. ಇನ್ನು ಉಳಿದ 2 ಕಂತುಗಳ ಹಣವನ್ನು ಮಾರ್ಚ್ 31 ರ ನಂತರ ಅಕೌಂಟಿಗೆ ಹಾಕಲಾಗುತ್ತದೆ ಎಂದು ಅವರು ಸ್ಪಷ್ಟನೆ ನೀಡಿದರು.

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Sun, 23 Mar 2025 19:40:40 +0530 shivuagrico
Kalu dari&ಇನ್ನು ಮುಂದೆ ನಿಮ್ಮ ಮೊಬೈಲ್ ನಲ್ಲೇ ನೋಡಿಕೊಳ್ಳಿ ನಿಮ್ಮ ಜಮೀನು ದಾರಿ https://krushirushi.in/Kalu-dari-1963 https://krushirushi.in/Kalu-dari-1963 Kalu dari-ಇನ್ನು ಮುಂದೆ ನಿಮ್ಮ ಮೊಬೈಲ್ ನಲ್ಲೇ ನೋಡಿಕೊಳ್ಳಿ ನಿಮ್ಮ ಜಮೀನು ದಾರಿ

ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ರಸ್ತೆ ಸಂಪರ್ಕ ಒದಗಿಸುವುದು ನಮ್ಮ ಗುರಿಯಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರ ವಿನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಕುರಿತು ವಿಧಾನಸಭೆಯಲ್ಲಿ ಮಾಹಿತಿ ನೀಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 

'ನಮ್ಮ ಗ್ರಾಮ, ನಮ್ಮ ಹೊಲ' ಯೋಜನೆ ಸ್ಥಗಿತವಾಗಿರುವುದರಿಂದ ರೈತರು ಹೊಲಕ್ಕೆ ಹೋಗುವ ದಾರಿಗಳಿಗೆ ಅವಕಾಶ ಕಲ್ಪಿಸುವ ನೀತಿಯನ್ನು ಹೊಸ ರೂಪದಲ್ಲಿ ತರುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇನೆ.

ರಸ್ತೆಗಳು ಎಂಬ ಪರಿಕಲ್ಪನೆಯಲ್ಲಿ ಕಾಲುದಾರಿ(Kalu Dari),
ಬಂಡಿ ಜಾಡು(Bandi jadu)ಕೂಡಾ ಒಳಗೊಂಡಿರುತ್ತವೆ' ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಭೂಸ್ವಾಧೀನ ಕಾಯ್ದೆಯಡಿ ಜಮೀಣು ಸ್ವಾಧೀನಪಡಿಸಿಕೊಂಡ ಮಾತ್ರಕ್ಕೆ 'ಬಿ ಖರಾಬ್' ಭೂಮಿಯಲ್ಲಿ ಸಾರ್ವಜನಿಕರ ಹಕ್ಕನ್ನು ರದ್ದುಪಡಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

'ಕರ್ನಾಟಕ ಭೂ ಕಂದಾಯ ಕಾಯ್ದೆ-1964ರ ಕಲಂ 67ರ ಪ್ರಕಾರ ಎಲ್ಲಾ ಸಾರ್ವಜನಿಕ ರಸ್ತೆಗಳು, ಬೀದಿಗಳು, ಓಣಿಗಳು, ಪಥಗಳು, ಸೇತುವೆಗಳು, ಕಂದಕಗಳು, ತಡೆಗೋಡೆಗಳು ಮತ್ತು ಬೇಲಿಗಳು ಸರ್ಕಾರಕ್ಕೆ ಸೇರಿವೆ ಎಂದು ಸೂಚಿಸುತ್ತದೆ. ಕಾಲುದಾರಿ(Klaudari) ಅಥವಾ ಬಂಡಿ ಜಾಡು (Bandi jadu)ಎಂಬ ಗಾಡಿ ಜಾಡು ಈ ಹಿಂದೆ ಕರೆಯಲಾಗುತ್ತಿದ್ದ ರಸ್ತೆಗಳೆನಿಸಿವೆ' ಎಂದು ನ್ಯಾಯಪೀಠ ಹೇಳಿದೆ.


'ಕಾಲುದಾರಿ, ಬಂಡಿ ಜಾಡು ಸ್ಥಳವನ್ನು ಗ್ರಾಮದ ನಕ್ಷೆಯಲ್ಲಿ(Village map) ಮತ್ತು ಸಂಬಂಧಿತ ಕಂದಾಯ ದಾಖಲೆಗಳಲ್ಲಿ ಗುರುತಿಸಲಾಗಿದೆ. ಭೂಮಾಲೀಕರಿಗೆ ಸಂಬಂಧಿಸಿದಂತೆ ಈ ಭಾಗವನ್ನು 'ಬಿ ಖರಾಬ್' ಎಂದು ವರ್ಗೀಕರಿಸಲಾಗಿದೆ. ಈ ಜಮೀನುಗಳು ಸರ್ಕಾರಕ್ಕೆ ಸೇರಿದ್ದರೂ, ಸಾರ್ವಜನಿಕರ ಹಕ್ಕನ್ನೂ ನೀಡಲಾಗಿರುತ್ತದೆ' ಎಂದು ನ್ಯಾಯಪೀಠ ತಿಳಿಸಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆಯ ಕಲಂ 68ರ ಪ್ರಕಾರ 'ಬಿ
ಖರಾಬ್'ನಲ್ಲಿ ಸಾರ್ವಜನಿಕರ ಹಕ್ಕನ್ನು ಕಸಿದುಕೊಳ್ಳಲಾಗಿಲ್ಲ. ಈ ಸ್ಥಳದ ಮತ್ತು ಸುತ್ತಮುತ್ತಲಿನ ಎಲ್ಲಾ ಗ್ರಾಮಸ್ಥರು ಅಥವಾ ಸಾರ್ವಜನಿಕರು ಕಾಲುದಾರಿ ಬಳಸಲು ಅರ್ಹರಾಗಿರುತ್ತಾರೆ. ಹಾಗಾಗಿ, ಅರ್ಜಿದಾರರು ಈ ಭೂಮಿಯನ್ನು ಮೀಸಲಿಡಬೇಕಾಗಿತ್ತು ಮತ್ತು ಅದನ್ನು ಮಾರುಕಟ್ಟೆ ಪ್ರಾಂಗಣದ ಉದ್ದೇಶಗಳಿಗಾಗಿ ಬಳಸಬಾರದು' ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.

ರೈತರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯಿಲ್ಲದೆ ಸಾಕಷ್ಟು ಕಷ್ಟ ಪಡುತ್ತಿರುತ್ತಾರೆ. ಜಮೀನು ಹತ್ತಿರವೇ ಇರುತ್ತದೆ. ಆದರೆ ಎತ್ತಿನ ಬಂಡಿ ಹೋಗುವ ದಾರಿಯಿಲ್ಲದೆ ಬಹಳಷ್ಟು ತೊಂದರೆ ಅನುಭವಿಸುತ್ತಿರುತ್ತಾರೆ. ಅದಲ್ಲದೆ ಆದರೆ ಕೆಲವರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯೇ ಇಲ್ಲ.

ಅಕ್ಕಪಕ್ಕದ ಜಮೀನುಗಳಿಗೆ ದಾರಿ ಮಾಡಿಕೊಡದೆ ತೊಂದರೆ ಕೊಡುತ್ತಾರೆ.ಆದರೆ ಸರ್ಕಾರ ಈ ಕುರಿತು ಹೊಸ ನಿಯಮಾವಳಿಗಳನ್ನು ಹೊರಡಿಸಿದೆ. ನೀವು ಭೂಮಿಯನ್ನು ಹೊಂದಿರುವಾಗ ಜಮೀನಿನಲ್ಲಿ ಕೃಷಿ ಕಾರ್ಯಾಚರಣೆಗಳು ಎಷ್ಟು ಮುಖ್ಯವೋ, ಕ್ಷೇತ್ರಕ್ಕೆ ಪ್ರವೇಶವನ್ನು ಖಚಿತಪಡಿಸಿಕೊಳ್ಳುವುದು ಅಷ್ಟೇ ಮುಖ್ಯ.

ರೈತರು ತಮ್ಮ ಕೃಷಿ ಪರಿಕರಗಳನ್ನು ಜಮೀನಿಗೆ ಒಯ್ಯಬೇಕು. ಆದರೆ ಸರಿಯಾದ ದಾರಿ ಇಲ್ಲದಿದ್ದರೆ ಸಾಧ್ಯವಿಲ್ಲ. ಅಕ್ಕಪಕ್ಕದ ರೈತರನ್ನು ದಾರಿ ಕೇಳಿದರೆ ಅವರು ನಿರಾಕರಿಸುತ್ತಾರೆ. ತೊಂದರೆ ಕೊಡಲು ಪ್ರಯತ್ನಿಸುತ್ತಾರೆ. ಇಂತಹ ಸಮಯದಲ್ಲಿ ನೀವು ಕಾನೂನಿನ ಆಶ್ರಯವನ್ನು ತೆಗೆದುಕೊಳ್ಳಬಹುದು. ಈ ಕಾಯಿದೆಯ ಮೂಲಕ ನಿಮ್ಮ ಭೂಮಿಗೆ ಪ್ರವೇಶವನ್ನು ಮಾಡಬಹುದು. ಜಮೀನಿನ ದಾರಿಯ ಬಗ್ಗೆ ಕಾನೂನು ವ್ಯವಸ್ಥೆಯಲ್ಲಿ ಕಾನೂನುಗಳಿವೆ.

ಸರಾಗಗೊಳಿಸುವ ಕಾಯಿದೆಯು ಅವಶ್ಯಕತೆಯ ಸುಲಭತೆಯನ್ನು ಸೂಚಿಸುತ್ತದೆ. ಕಾನೂನಿನ ನಿಯಮದ ಪ್ರಕಾರ.. ಯಾವುದೇ ಕ್ಷೇತ್ರವು ಮತ್ತೊಂದು ಕ್ಷೇತ್ರದ ಮುಂದೆ ಇರುವಾಗ ಹಿಂಬದಿ ಕ್ಷೇತ್ರಕ್ಕೆ ಬಿಟ್ಟುಕೊಡಬೇಕು ಇಲ್ಲದಿದ್ದರೆ ಪ್ರಕರಣ ದಾಖಲಿಸಬಹುದು. ಸರಾಗ ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕಾದ ಇನ್ನೊಂದು ಮುಖ್ಯ ವಿಷಯವೆಂದರೆ ಈ ಹಿಂದೆ ಆ ಜಮೀನಿಗೆ ರಸ್ತೆ ಇದ್ದು, ಈಗ ಅದು ಮುಚ್ಚಿದ್ದರೆ ನೀವು ಅದರ ಬಗ್ಗೆ ಕೇಸ್‌ ದಾಖಲಿಸಬಹುದು. ಬೇರೆ ಜಮೀನಿಗೆ ಹೋಗಬೇಕಾದರೆ ದಾರಿ ಬಿಡಬೇಕು. ಇಲ್ಲದಿದ್ದರೆ ನೊಂದ ರೈತರು ಪ್ರಕರಣ ದಾಖಲಿಸಬಹುದು. ಟೆನೆನ್ಸಿ ಆಕ್ಟ್‌ನ ಸೆಕ್ಷನ್ 251 ನಿಮ್ಮ ಫಾರ್ಮ್‌ಗೆ ಹೋಗುವ ಹೊಸ ರಸ್ತೆಯನ್ನು ನಿರ್ಮಿಸಲು ನಿಮಗೆ ಅನುಮತಿಸುತ್ತದೆ.

Village map-ನಿಮ್ಮ ಊರಿನ ಕಾಲುದಾರಿ,ಬಂಡಿದಾರಿ ತಿಳಿಯುವ ಡೈರೆಕ್ಟ್ ಲಿಂಕ್

https://landrecords.karnataka.gov.in/indexkn.aspx 

ನಂತರ ಕಂದಾಯ ನಕ್ಷೆಗಳು ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೋಬಳಿ,ಗ್ರಾಮ select ಮಾಡಿ, search ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ ಗ್ರಾಮದ ಹೆಸರು ಕಾಣೆಸುತ್ತದೆ. ಆಗ ನಿಮ್ಮ ಗ್ರಾಮದ ಮುಂದಿರುವ pdf file ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದ ನಕ್ಷೆ ಕಾಣೆಸುತ್ತದೆ. ಅದರಲ್ಲಿ ಕಾಲುದಾರಿ,ಬಂಡಿದಾರಿ,ಕೆರೆ ಕಟ್ಟೆಯನ್ನು ನೋಡಬಹುದು.

]]>
Sun, 23 Mar 2025 16:31:05 +0530 shivuagrico
Dbt karnataka&ಆಧಾರ್ ನಂಬರ್ ಹಾಕಿ ಯಾವ ಯೋಜನೆಯಿಂದ ಎಷ್ಟು ಹಣ ಜಮೆ ಆಗಿದೆ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ https://krushirushi.in/Dbt-Karnataka-1962 https://krushirushi.in/Dbt-Karnataka-1962 Dbt karnataka-ಆಧಾರ್ ನಂಬರ್ ಹಾಕಿ ಯಾವ ಯೋಜನೆಯಿಂದ ಎಷ್ಟು ಹಣ ಜಮೆ ಆಗಿದೆ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಯೋಜನೆಗಳ ಪಟ್ಟಿ ದೊರೆಯಲಿದೆ, ಅದರಲ್ಲಿ ನಿಮಗೆ ಬೇಕಾದ ಯೋಜನೆಯ ಮೇಲೆ ಕ್ಲಿಕ್ ಮಾಡಿ

ಉದಾಹರಣೆಗೆ ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿ(Gruhalakahmi)

ಈ ಕೆಳಗಿನಂತೆ ಇಲ್ಲಿಯವರೆಗೂ ಹಣ ಜಮಾ ಆಗಿರುವ ಮಾಹಿತಿ ತೋರಿಸುತ್ತದೆ.

]]>
Sun, 23 Mar 2025 06:01:29 +0530 shivuagrico
Without interest loan&5 ಲಕ್ಷದವರೆಗೆ ಬಡ್ಡಿರಹಿತ ಬೆಳೆ ಸಾಲ, ನಿಮ್ಮ ಸರ್ವೆ ನಂಬರ್ ಮೇಲೆ ಎಷ್ಟು ಸಾಲ ಇದೆ? ಇನ್ನೂ ಎಷ್ಟು ಸಾಲ ಸಿಗಲಿದೆ ಚೆಕ್ ಮಾಡಿ https://krushirushi.in/Without-interest-loan-1961 https://krushirushi.in/Without-interest-loan-1961 Without interest loan-5 ಲಕ್ಷದವರೆಗೆ ಬಡ್ಡಿರಹಿತ ಬೆಳೆ ಸಾಲ


ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ(Farmer) ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ 5 ಲಕ್ಷವರೆಗೆ ಬಡ್ಡಿ ರಹಿತ ಸಾಲ(Without interest loan)ಸೌಲಭ್ಯ ನೀಡಲಿದೆ.

ಹೌದು, ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಹವಾಮಾನ ವೈಪರೀತ್ಯ, ಅನಿಶ್ಚಿತ ಫಸಲು ಹಾಗೂ ರೋಗರುಜಿನಗಳಿಂದ ತತ್ತರಿಸಿಹೋಗಿರುವ ಕೃಷಿ ಕ್ಷೇತ್ರದಲ್ಲಿ ಮತ್ತೆ ಉತ್ಸಾಹವನ್ನು ಕಾಣಲು ನಮ್ಮ ಸರ್ಕಾರ ಟೊಂಕ ಕಟ್ಟಿ ನಿಂತಿದೆ.

ಅನ್ನದಾತರ ಕೈಗಳಿಗೆ ಹಣ ನೀಡಿ ಅದನ್ನು ಕೃಷಿಯಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸಿ, ಆ ಮೂಲಕ ನಾಡಿನ ಆರ್ಥಿಕತೆಗೆ ಬಲತುಂಬುವುದು ನಮ್ಮ ಸರ್ಕಾರದ ಆಶಯ ಎಂದು ಹೇಳಿದ್ದಾರೆ.

5 ಲಕ್ಷ ರೂ.ಗಳವರೆಗೆ ಶೂನ್ಯ ಬಡ್ಡಿ (Zero interest loan)ರೂಪದಲ್ಲಿ ನೀಡಲಾಗುವ ಸಾಲವನ್ನು ಸಹಕಾರಿ ಕೃಷಿ ಬ್ಯಾಂಕ್ (Primary cooperative society)ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ಗಳಿಗೆ ವಿಸ್ತರಿಸಲಾಗಿದೆ. ಇದಕ್ಕಾಗಿ ಹೆಚ್ಚುವರಿಯಾಗಿ 38 ಕೋಟಿ ರೂ. ಮೀಸಲಿರಿಸಲಾಗಿದೆ.ರೈತರ ಕಾಳಜಿ ಎನ್ನುವುದು ನಮ್ಮ ಭಾಷಣದ ಸರಕಲ್ಲ, ಆಡಳಿತದ ಕೇಂದ್ರಬಿಂದು ಎಂಬುದನ್ನು ಮತ್ತೆ ಸಾಬೀತು ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಿಮ್ಮ ಸರ್ವೆ ನಂಬರ್ ಮೇಲೆ ಎಷ್ಟು ಸಾಲ ಇದೆ? ಇನ್ನೂ ಎಷ್ಟು ಸಾಲ ಸಿಗಲಿದೆ ಚೆಕ್ ಮಾಡಿ

ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು 

https://landrecords.karnataka.gov.in/Service2/

 ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ. 

 ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ

  ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ

ನಂತರ view ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ

ಇದನ್ನೂ ಓದಿ

ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427 

 ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್(Survey number) ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.

ಸರ್ವೆ ನಂಬರಿನಲ್ಲಿ(Survey number) ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.

  ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ(crop loan) ಪಡೆಯಲಾಗಿದೆ.  ಎಂಬ ಮಾಹಿತಿ ಇರುತ್ತದೆ.ಕಿಸಾನ್ ಕ್ರೆಡಿಟ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಪಡೆಯಲು ಅವಕಾಶ ಇರುವುದರಿಂದ,ಸಾಲದ ವಿವರ ನೊಡಿಕೊಂಡು ಉಳಿದ ಸಾಲ ಪಡೆಯಬಹುದು.

ಇದನ್ನೂ ಓದಿ

Waqf board property-ಸರ್ವೆ ನಂಬರ್ ಹಾಕಿ ನಿಮ್ಮ ಪಹಣೆ ನಿಮ್ಮ ಹೆಸರಿನಲ್ಲಿದೆಯೊ ಅಥವಾ ಬೇರೆಯವರ ಹೆಸರಿನಲ್ಲಿದೆಯೊ ಚೆಕ್ ಮಾಡಿಕೊಳ್ಳಿ - https://krushirushi.in/Waqf-board-property-1672 

]]>
Sat, 22 Mar 2025 16:55:11 +0530 shivuagrico
Rain forecast&ಇಂದಿನಿಂದ ಮಾರ್ಚ್ 27ರವರೆಗೆ ಜಿಲ್ಲಾವಾರು ಮಳೆ ಮಾಹಿತಿ https://krushirushi.in/Rain-forecast-1960 https://krushirushi.in/Rain-forecast-1960 Rain forecast-ಇಂದಿನಿಂದ ಮಾರ್ಚ್ 27ರವರೆಗೆ ಜಿಲ್ಲಾವಾರು ಮಳೆ ಮಾಹಿತಿ

ಗಳೂರು: ಬಿರುಬಿಸಿಲಿನ ನಡುವೆ ರಾಜ್ಯದ ಹಲವೆಡೆ ಶುಕ್ರವಾರ ಗುಡುಗು ಸಹಿತ ಮಳೆಯಾಗಿದ್ದು, ಮಾ.22ರಂದು ಕೂಡ ಮಳೆಯಾಗುವ (Weather Forecast) ಮುನ್ಸೂಚನೆ ಸಿಕ್ಕಿದೆ. ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಕೊಡಗು, ವಿಜಯನಗರ, ಹಾಸನ, ವಿಜಯನಗರ, ಹಾಸನ, ವಿಜಯನಗರ, ಹಾಸನ ಜಿಲ್ಲೆಗಳಲ್ಲಿ ಶನಿವಾರ ಗುಡುಗು ಸಹಿತ ಮಳೆಯಾಗುವ (Heavy Rain) ಸಂಭವವಿದೆ.

ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳು, ಕರ್ನಾಟಕದ ಒಳಗಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ: ಮೋಡ ಕವಿದ ಆಕಾಶ ಇರಲಿದ್ದು, ರಾತ್ರಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 °C ಮತ್ತು 21°C ಆಗಿರಬಹುದು.

ಮಾ.27ರವರೆಗೆ ರಾಜ್ಯದಲ್ಲಿ ಗುಡುಗು ಸಹಿತ ಮಳೆ

ಮಾ.23ರಂದು ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಕೊಡಗು, ಚಿಕ್ಕಮಗಳೂರು, ಹಾಸನ, ಚಿಕ್ಕಮಗಳೂರು, ಚಿಕ್ಕಮಗಳೂರು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಮಂಡ್ಯ ಮತ್ತು ಮೈಸೂರು ಜಿಲ್ಲೆಗಳು, ಕರ್ನಾಟಕದ ಒಳಗಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಮಾ.24ರಂದು ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳಗಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಮಾ.25ರಂದು ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳಗಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಮಾ.26ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಮಾ.27ರಂದು ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಹೆಚ್ಚಾಗಿರಲಿದೆ.

]]>
Sat, 22 Mar 2025 13:55:09 +0530 shivuagrico
Kisan samman&ತುಂಡು ಕೃಷಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರಿಗೂ ಪಿಎಂ ಕಿಸಾನ್ ಹಣ&ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್,ಹಾಗಾದರೆ ಅರ್ಹತೆಯ ಮಾನದಂಡಗಳೇನು? https://krushirushi.in/Kisan-samman-1959 https://krushirushi.in/Kisan-samman-1959 Kisan samman-ತುಂಡು ಕೃಷಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರಿಗೂ ಪಿಎಂ ಕಿಸಾನ್ ಹಣ-ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್


ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ(Pradan mantri kisan samman yojane) 
ಅಡಿ ಅರ್ಹ ಎಲ್ಲ ರೈತರಿಗೆ ಸೌಲಭ್ಯ ನೀಡಲು ಕೇಂದ್ರ ಸರ್ಕಾರ ಸಿದ್ದವಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಹೇಳಿದರು.


ಲೋಕಸಭೆಯಲ್ಲಿ ಮಂಗಳವಾರ ಪ್ರಶೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಭೂ ರಹಿತರಿಗೆ ಈ ಸೌಲಭ್ಯ ನೀಡುವುದಿಲ್ಲ. ಆದರೆ, ತುಂಡು ಕೃಷಿ ಭೂಮಿಯನ್ನಾದರೂ ಹೊಂದಿರಬೇಕು ಎಂದು ವಿವರಿಸಿದರು. 


'ಈ ಯೋಜನೆಯಡಿ ಕೇಂದ್ರ ಸರ್ಕಾರವು ಈವರೆಗೆ 19 ಕಂತುಗಳಲ್ಲಿ ₹3.68 ಲಕ್ಷ ಕೋಟಿ ಮೊತ್ತವನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದೆ' ಎಂದರು. 


ಯೋಜನೆಯ ಭಾಗವಾಗಿಲ್ಲದ ಎಲ್ಲ ಅರ್ಹ ರೈತರಿಗೆ ವಾರ್ಷಿಕ ₹6,000 ನಗದು ಪ್ರಯೋಜನ ನೀಡಲು ಸರ್ಕಾರ ಸಿದ್ಧವಾಗಿದೆ. ಅಂತಹ ರೈತರಿಗೆ ಹಿಂದಿನ ಕಂತುಗಳನ್ನು ನೀಡಲು ಸಿದ್ಧರಿದ್ದೇವೆ. ಅಂತಹ ರೈತರನ್ನು ಗುರುತಿಸಿ ಯೋಜನೆಯಲ್ಲಿ ಸೇರಿಸಲು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಅವರು ಕೋರಿದರು.

ಪಿಎಂ ಕಿಸಾನ್(kisan samman) ಅರ್ಹತೆಯ ಮಾನದಂಡಗಳೇನು?
ಎಲ್ಲ ಅರ್ಹ ಫಲಾನುಭವಿಗಳು ಕನಿಷ್ಠ ಪ್ರಮಾಣದ ಭೂಮಿ ಹೊಂದಿರಬೇಕು. ಇ-ಕೆವೈಸಿ ಮಾಡಿಸಿಕೊಳ್ಳಬೇಕು ಮತ್ತು ಪಿಎಂ-ಕಿಸಾನ್ ಪೋರ್ಟಲ್‌ನಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು. 
ನಿಧಿಯನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಗಾಯಿಸಲಾಗುತ್ತದೆ ಎಂದು ಅವರು ಹೇಳಿದರು.

ಇಲ್ಲಿಯವರೆಗೂ 19 ಕಂತುಗಳಲ್ಲಿ 3.68 ಲಕ್ಷ ಕೋಟಿ ಪಿಎಂ ಕಿಸಾನ್ ಹಣ ರೈತರ ಖಾತೆಗೆ


ಇದುವರೆಗೆ 3.68 ಲಕ್ಷ ಕೋಟಿ ರೂಪಾಯಿಗಳನ್ನು 19 ಕಂತುಗಳಲ್ಲಿ ದೇಶದಾದ್ಯಂತದ ರೈತರಿಗೆ ವಿತರಿಸಲಾಗಿದೆ

ನಿಮಗೇಷ್ಟು ಜಮಾ ಹೀಗೆ ಚೆಕ್ ಮಾಡಿ-Pmkisan beneficiary status 

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/

ಮೊದಲು know your status ಮೇಲೆ ಕ್ಲಿಕ್ ಮಾಡಿ

ನಂತರ know your register number ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ

ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.

ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ

ನಂತರ update your details ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ

 Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.

ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ

Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.

FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ  ಕಾರಣ ಮತ್ತು ಪರಿಹಾರ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

fruitspmk.gov.in ಪೋರ್ಟಲ್ ನಲ್ಲಿ

1

ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ

ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು                                                                     ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು

ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ  (NIC)                     ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ.            ಆ) ಸಮಸ್ಯಾತ್ಮಕ  ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ.

2

ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು

ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ

ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ    ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ

3

ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು

 ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ

ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ   ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ

4

ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ

ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ

OPERATOR ಲಾಗಿನ್ (RSK, ADA office, JDA office)  OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು

5

01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ

ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ

ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ)

6

Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು

ಜಿಲ್ಲೆಗಳಲ್ಲಿ  OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ

AAO ಲಾಗಿನ್  (RSK, ADA office, JDA office)  AAO ಲಾಗಿನ್ನಲ್ಲಿ  ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ,  ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

7

ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ

ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ)

AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.

8

PFMS rejected

Aadhaar Number is not seeded in NPCI

ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ

Bank Name And IFSC Code are not related to each other

ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ

Bank Name is not as per PFMS Bank Master.

Beneficiary is rejected as Account Type is other than SB / SBA / JD

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ)

Duplicate Beneficiary Name , Bank Account No and Bank Name not allowed for same scheme

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

IFSC Code  either not present or currently inactive in tbl BankBranch

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

Incorrect Aadhaar Number

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

One or more mandatory tags values are missing.

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

Rejected by Bank, Account No does not exist in Bank/INVALID/CLOSED

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

9

Amount credited to Account Number-NA

Aadhaar number based payment by GoI

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ.

10

PAYMENT STOPPED BY STATE

 XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳಿದ್ದರೆ ಕೇಂದ್ರ ಕಚೇರಿ ಮಾಹಿತಿ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

11

Transaction failed

ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ.

12

ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ

OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳ   ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

13

ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು

ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ.

ಕೇಂದ್ರ ಸರ್ಕಾರ ದ   pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ.

]]>
Fri, 21 Mar 2025 23:23:42 +0530 shivuagrico
ಟ್ರ್ಯಾಕ್ಟರ್ ಸೇರಿದಂತೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ&Tractor subsidy scheme 2025 https://krushirushi.in/Tractor-subsidy-scheme-1958 https://krushirushi.in/Tractor-subsidy-scheme-1958 Horticulture department subsidy schemes-ತೋಟಗಾರಿಕೆ ಇಲಾಖೆಯಿಂದ 50% ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ


ರೈತರ ಆದಾಯವನ್ನು ಹೆಚ್ಚಿಸಲು ಮತ್ತು ತೋಟಗಾರಿಕಾ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಸರ್ಕಾರವು ರಾಷ್ಟ್ರೀಯ ತೋಟಗಾರಿಕೆ ಮಂಡಳಿ (NHB) ಮೂಲಕ ಹಲವಾರು ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ರೈತರು ಶೇಡ್‌ ನೆಟ್(Shade net), ಹಸಿರು ಮನೆ(green house), ಪಾಲಿಹೌಸ್ ಕೃಷಿ(Poly house), ಶೀತಲೀಕರಣ ಘಟಕ(cold storage) ಮತ್ತು ಅಣಬೆ ಕೃಷಿ(Mushroom cultivation)ಸ್ಥಾಪನೆಗೆ ಶೇಕಡಾ 50 ರವರೆಗೆ ಸಬ್ಸಿಡಿ ಪಡೆಯಬಹುದು.

ಯಾವೆಲ್ಲಾ ಸೌಲಭ್ಯಗಳು ಲಭ್ಯವಿದೆ‌ ?

ಶೇಡ್‌ ನೆಟ್(Shade net), ಹಸಿರು ಮನೆ(Green House) ಮತ್ತು ಪಾಲಿಹೌಸ್ ಕೃಷಿ(Poly House): ಈ ರೀತಿಯ ಕೃಷಿಗೆ ಸರ್ಕಾರವು ಶೇಕಡಾ 50 ರವರೆಗೆ ಸಬ್ಸಿಡಿ ನೀಡುತ್ತಿದೆ.
ತೆರೆದ ಜಮೀನಿನಲ್ಲಿ ಹಣ್ಣಿನ ಕೃಷಿ: ನೆಲ್ಲಿಕಾಯಿ, ಮಾವು, ಪೇರಲದಂತಹ ಹಣ್ಣುಗಳನ್ನು ಬೆಳೆಯುವ ರೈತರಿಗೆ ಶೇಕಡಾ 40 ರವರೆಗೆ ಸಬ್ಸಿಡಿ ನೀಡಲಾಗುತ್ತಿದೆ.


ಶೀತಲೀಕರಣ ಘಟಕ ಮತ್ತು ಅಣಬೆ ಕೃಷಿ: ಶೀತಲೀಕರಣ ಘಟಕ ಸ್ಥಾಪನೆಗೆ ಶೇಕಡಾ 30 ರಿಂದ 50 ರವರೆಗೆ ಮತ್ತು ಅಣಬೆ ಕೃಷಿಗೆ ಶೇಕಡಾ 40 ರವರೆಗೆ ಸಬ್ಸಿಡಿ ನೀಡಲಾಗುತ್ತಿದೆ.
ಕೃಷಿ ಸಂಬಂಧಿತ ಉದ್ಯಮಿಗಳು, ಸ್ಟಾರ್ಟ್‌ಅಪ್‌ಗಳು ಮತ್ತು ರೈತರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ.
ಹಣ್ಣು ಮತ್ತು ಹೂವುಗಳ ಕೃಷಿಯ ಜೊತೆಗೆ ಸಂಬಾರ ಪದಾರ್ಥಗಳು, ಆರೊಮ್ಯಾಟಿಕ್ ಮತ್ತು ಔಷಧೀಯ ಸಸ್ಯಗಳ ಕೃಷಿಗೂ ಸಬ್ಸಿಡಿ ನೀಡಲಾಗುತ್ತಿದೆ.


ಅರ್ಜಿ ಸಲ್ಲಿಸುವುದು ಹೇಗೆ ?

ರೈತರು ರಾಷ್ಟ್ರೀಯ ತೋಟಗಾರಿಕೆ ಮಂಡಳಿಯ ಅಧಿಕೃತ ವೆಬ್‌ಸೈಟ್ www.nhb.gov.in  ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಯೋಜನೆಯ ವೆಚ್ಚಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.


ಬೇಕಾಗುವ ದಾಖಲೆಗಳು

ಪ್ಯಾನ್ ಕಾರ್ಡ್
ಮತದಾರರ ಗುರುತಿನ ಚೀಟಿ
ಆಧಾರ್ ಕಾರ್ಡ್
ಪಾಲುದಾರಿಕೆ ಸಂಸ್ಥೆಯ ನೋಂದಣಿ (ಅನ್ವಯಿಸಿದರೆ)
ಕಂಪನಿ, ಸೊಸೈಟಿ, ಟ್ರಸ್ಟ್ ಇತ್ಯಾದಿಗಳ ನೋಂದಣಿ (ಅನ್ವಯಿಸಿದರೆ)


ಹೆಚ್ಚಿನ ಮಾಹಿತಿ:

ಹೆಚ್ಚಿನ ಮಾಹಿತಿಗಾಗಿ, ನಿಮ್ಮ ಹತ್ತಿರದ ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಿ.
ಅಥವಾ, ರಾಷ್ಟ್ರೀಯ ತೋಟಗಾರಿಕೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ಈ ಯೋಜನೆಯು ರೈತರಿಗೆ ತೋಟಗಾರಿಕೆ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಮತ್ತು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ.

ಟ್ರ್ಯಾಕ್ಟರ್ ಸೇರಿದಂತೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Tractor subsidy scheme 2025

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಕೃಷಿಹೊಂಡ, ಪ್ಯಾಕ್‌ಹೌಸ್, ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್‌ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


 ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾ‌ರ್ ಕಾರ್ಡ್ ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ

https://horticulturedir.karnataka.gov.in/info-2/Facilities+available+to+farmers/kn

ವಿವಿಧ ಯೋಜನೆಗಳು:

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ:

ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೆÇೀಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:
ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಯಾಕ್‍ಹೌಸ್ ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ:
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.75 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ:

ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಮತ್ತು ಬೈಯೋಡೈಜಿಸ್ಟರ್ ಮತ್ತು ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಸಹ ಅರ್ಜಿ ಆಹ್ವಾನಿಸಲಾಗಿದೆ.

ಮೇಲ್ಕಂಡ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಲಾಗಿದೆ. ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.

]]>
Fri, 21 Mar 2025 19:29:53 +0530 shivuagrico
Yashsvini yojane&5 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಯಶಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಮಾರ್ಚ್ 31 ಕೊನೆಯ ದಿನಾಂಕ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ https://krushirushi.in/Yashsvini-yojane-1957 https://krushirushi.in/Yashsvini-yojane-1957

Yashsvini yojane-5 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಯಶಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಮಾರ್ಚ್ 31 ಕೊನೆಯ ದಿನಾಂಕ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

ರಾಜ್ಯದ ಜನತೆಗೆ ಸಂತಸದ ಸುದ್ದಿ. 2025-26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಸಹಕಾರ ಇಲಾಖೆ ಮಾರ್ಚ 31ರವರೆಗೆ ಅವಕಾಶ ಕಲ್ಪಿಸಿದೆ. 


ಗ್ರಾಮೀಣ ಪ್ರದೇಶದ ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ ಆ ಕುಟುಂಬ 500 ರೂಗಳ ವಂತಿಗೆ ಭರಿಸಬೇಕು. ನಾಲ್ಕಕ್ಕಿಂತ ಹೆಚ್ಚು ಸದಸ್ಯರಿದ್ದರೆ ತಲಾ 100 ರೂಗಳ ಹೆಚ್ಚುವರಿ ವಂತಿಗೆ ನೀಡಬೇಕು. ನಗರ ಪ್ರದೇಶದ ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ 1,000 ರೂಗಳು ಹಾಗೂ ಅದಕ್ಕಿಂತ ಹೆಚ್ಚು ಜನರಿದ್ದರೆ ತಲಾ 200 ರೂಗಳು ನಿಗದಿ ಮಾಡಲಾಗಿದೆ. 


ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರಿಗೆ ಉಚಿತ ಸದಸ್ಯತ್ವ 
ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರು ಉಚಿತವಾಗಿ ಸದಸ್ಯತ್ವ ಪಡೆಯಬಹುದು. ಈ ಯೋಜನೆ ಅಡಿ 1650 ವಿವಿಧ ಚಿಕಿತ್ಸೆಗಳು, 478 ಐಸಿಯು ಚಿಕಿತ್ಸೆಗಳು ಸೇರಿ ಒಟ್ಟು 2,128 ಚಿಕಿತ್ಸೆಗಳಿಗೆ ನಗದುರಹಿತ ಸೌಲಭ್ಯ ದೊರಕಲಿದೆ. 

Yashsvini yojane-ಯಶಸ್ವಿನಿ ಯೋಜನೆಯಡಿ ಉಚಿತವಾಗಿ ಸಿಗಲಿವೆ ಈ ಸೌಲಭ್ಯಗಳು

2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಹೊಸ ಸದಸ್ಯರ ನೋಂದಣಿಗೆ ಅವಕಾಶ ನೀಡಲಾಗಿದೆ.

ದಿನಾಂಕ 1/1/2024 ರಿಂದ ಯಶಸ್ವಿನಿ ನೊಂದಣೆ ಆರಂಭಗೊಂಡಿದ್ದು ದಿನಾಂಕ 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ.


ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತರ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ. 100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.
ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬAಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.

ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ನೆಟ್‌ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್‌ಡಿ ನಂಬರ್‌ ತರುವುದು ಕಡ್ಡಾಯವಾಗಿದೆ.

ಈ ಕೆಳಕಂಡ ಸೌಲಭ್ಯಗಳನ್ನು ಯಶಸ್ಮಿನಿ ಸದಸ್ಯರಿಗೆ ಒದಗಿಸಲಾಗುವುದು.

ಎ) ಪ್ರಸ್ತುತ ಯಶಸ್ಸಿನಿ ಯೋಜನೆಯಡಿಯಲ್ಲಿ ಟ್ರಸ್ಟ್ ಗುರ್ತಿಸಿದ 1650 ವಿವಿಧ ಚಿಕಿತ್ಸೆಗಳು ಮತ್ತು 478 ICU ಚಿಕಿತ್ಸೆಗಳೂ ಸೇರಿದಂತೆ ಒಟ್ಟು 2128 ಚಿಕಿತ್ಸೆಗಳನ್ನು ಅಳವಡಿಸಿಕೊಳ್ಳಲಾಗಿದೆ.

ಬಿ) ರೋಗಿಗಳಿಗೆ ಸದರಿ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದಲ್ಲಿ ನೋಂದಾಯಿಸಿದ ಯಶಸ್ಸಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಒದಗಿಸಲಾಗುವುದು. ನೆಟ್ವರ್ಕ್ ಆಸ್ಪತ್ರೆಗಳನ್ನು ಹೊರತುವಡಿಸಿ ಇತರೆ ಆಸ್ಪತ್ರೆಗಳಲ್ಲಿ ಯಶಸ್ವಿನಿ ಯೋಜನೆಯ ಸೇವೆ ಲಭ್ಯವಿರುವುದಿಲ್ಲ. ಯಶಸ್ಸಿನಿ ಯೋಜನೆಯಡಿ ಫಲಾನುಭವಿ ಚಿಕಿತ್ಸೆ ಪಡೆಯುವ ಮೊದಲು ಆಸ್ಪತ್ರೆಯು ಯೋಜನೆಗೆ ಒಳಪಟ್ಟಿರುವ ಬಗ್ಗೆ, ಖಾತ್ರಿ ಪಡಿಸಿಕೊಂಡು ನಂತರ ಚಿಕಿತ್ಸೆ ಪಡೆಯತಕ್ಕದ್ದು.

ಸಿ) ಯೋಜನೆಯಲ್ಲಿ ಒಳವಡದ ಚಿಕಿತ್ಸೆಗಳ ಮತ್ತು ಟ್ರಸ್ಟ್ ಅಂಗೀಕರಿಸದ ಆಸ್ಪತ್ರೆಗಳಲ್ಲಿ ಪಡೆದಂತಹ ಚಿಕಿತ್ಸೆಗಳಿಗೆ ಯಶಸ್ವಿನಿ ಟ್ರಸ್ಟ್ ಜವಾಬ್ದಾರರಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಆಸ್ಪತ್ರೆಗಳಿಗಾಗಲಿ ಅಥವಾ ಫಲಾನುಭವಿಗಳಿಗಾಗಲಿ ಚಿಕಿತ್ಸಾ ವೆಚ್ಚವನ್ನು ಪಾವತಿಸಲಾಗುವುದಿಲ್ಲ.

ಡಿ) ಎರಡು ಜೀವಂತ ಮಕ್ಕಳು ಅಥವಾ ಎರಡು ಹೆರಿಗೆಗೆ ಮಾತ್ರ ಯಶಸ್ವಿನಿ ಯೋಜನೆಯಲ್ಲಿ ಸೌಲಭ್ಯ ದೊರೆಯುತ್ತದೆ.

ಇ) ಯಶಸ್ವಿನಿ ಯೋಜನೆಯ ಪ್ರೋಟೋಕಾಲ್ ಪ್ರಕಾರ ಯಶಸ್ವಿನಿ ಫಲಾನುಭವಿಗಳು ಜನರಲ್ ವಾರ್ಡನಲ್ಲಿ ಮಾತ್ರ ಚಿಕಿತ್ಸೆ ವಡೆಯಲು ಅರ್ಹರಿರುತ್ತಾರೆ. ಒಂದು ವೇಳೆ ಯೋಜನೆಯಡಿ ನಿಗದಿಪಡಿಸಿರುವ ಜನರಲ್ ವಾರ್ಡ್ ಬದಲಾಗಿ ಉನ್ನತ(Semi Special Ward Or Special Ward)ನಲ್ಲಿ ಚಿಕಿತ್ಸೆ ಪಡೆಯಲು ಇಚ್ಚಿಸಿದಲ್ಲಿ ಸದರಿ ಫಲಾನುಭವಿಗಳಿಗೆ ಯೋಜನೆಯಡಿ ನಿಗದಿ ಪಡಿಸಿರುವಂತೆ ಜನರಲ್ ವಾರ್ಡಗೆ ಅನ್ವಯಿಸುವ ಚಿಕಿತ್ಸೆಯ ವೆಚ್ಚವನ್ನು ಮಾತ್ರ ಭರಿಸಲಾಗುವುದು. ಉನ್ನತ ವಾರ್ಡ್/ಸ್ಪೆಷಲ್ ವಾರ್ಡಿಗೆ ಆಗುವ ಹೆಚ್ಚುವರಿ ವ್ಯತ್ಯಾಸದ ಚಿಕಿತ್ಸಾ ಮೊತ್ತವನ್ನುಸದರಿ ಫಲಾನುಭವಿಗಳೇ ಭರಿಸತಕ್ಕದ್ದು.

ಎಫ್) ಯಶಸ್ವಿನಿ ಯೋಜನೆಯ ವ್ಯಾಕೇಜಿನಲ್ಲಿ Implants ಅಗತ್ಯವಿರುವ ಕಡೆ Implants ơ. (Ex. Knee replacement, Lens in cataract Surgery) ವೇಳೆ ಫಲಾನುಭವಿಗಳು ಉನ್ನತ Implants ಅಥವಾ Lens ನಡೆಯಲು ಸ್ವ ಇಚ್ಛೆಯಿಂದ ಒಪ್ಪಿಗೆ ಸೂಚಿಸಿದ್ದಲ್ಲಿ, ಅಂತಹ ಉನ್ನತ Implants ಮತ್ತು Lens ಗೆ ತಗಲುವ ವ್ಯತ್ಯಾಸದ ಹೆಚ್ಚುವರಿ ಮೊತ್ತವನ್ನು ಅಂತ ಫಲಾನುಭವಿಗಳೇ ಭರಿಸಿ ಚಿಕಿತ್ಸೆಯನ್ನು ವಡೆಯತಕ್ಕದ್ದು.

ಜಿ) ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಯಶಸ್ಸಿನಿ ಸದಸ್ಯರಿಗೆ ಹೊರ ರೋಗಿ ಚಿಕಿತ್ಸೆಗೆ (OPD) ಗರಿಷ್ಠ ರೂ.200/-ಗಳನ್ನು (ಮೂರು ತಿಂಗಳ ಅವಧಿಗೆ) ಮಿತಿ ನಿಗಧಿಪಡಿಸಿದ್ದು, ಈ ಪೈಕಿ ರೂ.100/- ಗಳನ್ನು ಯಶಸ್ವಿನಿ ಟ್ರಸ್ಟ್ ವತಿಯಿಂದ ವಾವತಿಸಲಾಗುವುದು.

17. ಸದಸ್ಯರ ನೋಂದಣಿಗೆ ಮಾರ್ಗಸೂಚಿಗಳು, ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳ ಯಾದಿ, ಶಸ್ತ್ರಚಿಕಿತ್ಸೆಗಳ ಯಾದಿ ಇವುಗಳನ್ನು ಸಹಕಾರ ಇಲಾಖೆಯ ಸಹಕಾರ ಸಿಂಧು ವೆಬ್‌ಸೈಟ್‌ನಲ್ಲಿ/ಟ್ರಸ್ಟ ವೆಬ್‌ಸೈಟ್‌ನಲ್ಲೂ ಅಪ್‌ಲೋಡ್ ಮಾಡಲಾಗುವುದು.

18. ಸದಸ್ಯರು ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಒದಗಿಸತಕ್ಕದು.

]]>
Fri, 21 Mar 2025 14:02:27 +0530 shivuagrico
Cancelled and suspended list&ರಾಜ್ಯದಲ್ಲಿ 21,980 ರೇಷನ್ ಕಾರ್ಡ್ ರದ್ದು, ರದ್ದಾದ ಪಟ್ಟಿಯಲ್ಲಿರುವವರಿಗಿಲ್ಲ ಅನ್ನಭಾಗ್ಯ ಗೃಹಲಕ್ಷ್ಮಿ ಹಣ https://krushirushi.in/Cancelled-and-suspended-list-1952 https://krushirushi.in/Cancelled-and-suspended-list-1952 Cancelled and suspended list-ರಾಜ್ಯದಲ್ಲಿ 21,980 ರೇಷನ್ ಕಾರ್ಡ್ ರದ್ದು

ನಕಲಿ ದಾಖಲೆ ನೀಡಿ ಪಡಿತರ ಚೀಟಿ ಪಡೆದುಕೊಂಡ ಅನರ್ಹರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಬರೋಬ್ಬರಿ 21,980 ಪಡಿತರ ಕಾರ್ಡ್ ಗಳನ್ನು ರದ್ದು ಪಡಿಸಿದೆ. 


ಹೌದು, ಆದಾಯ ತೆರಿಗೆ ಕಟ್ಟುವ ಹಾಗೂ ಸರ್ಕಾರಿ ನೌಕರಿ ಹೊಂದಿರುವ ಕುಟುಂಬದವರು ಬಿಪಿಎಲ್ ಕಾರ್ಡನ್ನು ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿರುವ ಕಾರ್ಡಗಳನ್ನು ಪತ್ತೆ ಹಚ್ಚುವ ಮೂಲಕ 21,980 ಪಡಿತರ ಚೀಟಿಗಳನ್ನು ರದ್ದುಪಡಿಸಿದೆ.

ಬೆಳಗಾವಿಯಲ್ಲಿ 1482, ಬೀದರ 814, ಹಾಸನ 1030, ಬಾಗಲಕೋಟೆಯಲ್ಲಿ 995, ಬಳ್ಳಾರಿಯಲ್ಲಿ 256, ಬೆಂಗಳೂರು ಈಸ್ಟ್ 531, ಹಾವೇರಿ 333, ಕಲಬುರಗಿ 1497, ಮೈಸೂರು 2441, ತುಮಕೂರು 1044, ಕೊಪ್ಪಳ 506, ಮಂಡ್ಯ 1168, ವಿಜಯನಗರ 204, ವಿಜಯಪುರ 654, ಯಾದಗಿರಿ 139 ಸೇರಿದಂತೆ ಒಟ್ಟು 35 ಜಿಲ್ಲೆಗಳಲ್ಲಿ 21,980 ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.

ರದ್ದಾದ ಪಟ್ಟಿಯಲ್ಲಿರುವವರಿಗಿಲ್ಲ ಅನ್ನಭಾಗ್ಯ ಗೃಹಲಕ್ಷ್ಮಿ ಹಣ

ರದ್ದಾದ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ e-Ration Card ಮೇಲೆ ಕ್ಲಿಕ್ ಮಾಡಿ

ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ ಮೇಲೆ ಕ್ಲಿಕ್ ಮಾಡಿ,Go ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ರದ್ದಾದ ರೇಷನ್ ಕಾರ್ಡ್ ಪಟ್ಟಿ ದೊರೆಯಲಿದೆ

 

]]>
Thu, 20 Mar 2025 18:58:48 +0530 shivuagrico
Bembala bele&ಬೆಂಬಲ ಬೆಲೆಯಡಿ ಈ ಬೆಳೆ ಕ್ವಿಂಟಲ್ ಗೆ 8000 ರೂಪಾಯಿಗೆ ಖರೀದಿ,ಮಾರ್ಚ್ 31ರವರೆಗೆ ನೆೊಂದಣೆಗೆ ಅವಕಾಶ https://krushirushi.in/Bembala-bele-1956 https://krushirushi.in/Bembala-bele-1956 Bembala bele-ಬೆಂಬಲ ಬೆಲೆಯಡಿ ಈ ಬೆಳೆ ಕ್ವಿಂಟಲ್ ಗೆ 8000 ರೂಪಾಯಿಗೆ ಖರೀದಿ,ಮಾರ್ಚ್ 31ರವರೆಗೆ ನೆೊಂದಣೆಗೆ ಅವಕಾಶ


ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ 8 ಸಾವಿರ ರೂ.ವಿನಂತೆ ತೊಗರಿ ಖರೀದಿಸಲು ರಾಜ್ಯದಲ್ಲಿ 330 ತೊಗರಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. 

ರೈತ ಬಾಂಧವರೇ, 
2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಖರೀದಿ ಪ್ರಕ್ರಿಯೆಗೆ ಸರ್ಕಾರ ಆದೇಶಿಸಿದ್ದು ರಾಜ್ಯದ ಪ್ರಮುಖ ಜಿಲ್ಲೆಗಳಾದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಕೊಪ್ಪಳ, ಬೆಳಗಾವಿ, ಚಿತ್ರದುರ್ಗ, ಚಿಕ್ಕಬಳ್ಳಾಪೂರ ಹಾಗೂ ಕೋಲಾರ ಜಿಲ್ಲೆಗಳ ವ್ಯಾಪ್ತಿಯಲ್ಲಿ ತೆರೆದಿರುವ ಖರೀದಿ ಕೇಂದ್ರಗಳಲ್ಲಿ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ರೂ. 7,550/- ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ರೂ. 450/- ಸೇರಿ ಒಟ್ಟು ರೂ. 8,000/-ನಿಗದಿಪಡಿಸಲಾಗಿರುತ್ತದೆ. ರೈತರು ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಮಾರಾಟ ಮಾಡಿ ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ. 


ಸೂಚನೆ: 
+ ಪ್ರತಿ ಎಕರೆಗೆ 04 ಕ್ವಿಂಟಲ್‌ರಂತೆ - ಗರಿಷ್ಠ 40 ಕ್ವಿಂಟಲ್‌ವರೆಗೆ ಪ್ರತಿ ರೈತರಿಂದ ಖರೀದಿಸಲಾಗುವುದು. 
+ ರೈತ ಬಾಂಧವರು ತಮ್ಮ ಹತ್ತಿರದ PACS/FPO/TAPCMS ಗಳಲ್ಲಿ ತಮ್ಮ ಫೂಟ್ಸ್‌ನ ಎಫ್.ಐ.ಡಿ. ಸಂಖ್ಯೆ ನೀಡಿ ನೋಂದಣಿ ಮಾಡಿಕೊಂಡು ಎಫ್.ಎ.ಕ್ಯೂ, ಗುಣಮಟ್ಟದ ತೊಗರಿ ಮಾರಾಟ ಮಾಡಬಹುದಾಗಿದೆ. 
+ ಹೆಚ್ಚಿನ ಮಾಹಿತಿಗಾಗಿ ಉಚಿತ ದೂರವಾಣಿ ಸಂಖ್ಯೆ: 1800 425 1552 ಯನ್ನು ಕಛೇರಿಯ ಸಮಯದಲ್ಲಿ ಸಂಪರ್ಕಿಸಿರಿ. 


ಪ್ರಕಟಣೆ: ಕೃಷಿ ಮಾರಾಟ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ. 


ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳು ಪ್ರಾರಂಭಿಸಲಾಗಿದೆ. 


ರೈತರು ತಮ ಹತ್ತಿರದ ಪಿಎಸಿಎಸ್/ಎಫ್‌ಪಿಒ/ಟಿಅಪಿಸಿಎಂಎಸ್ ಗಳಿಗೆ ಭೇಟಿ ನೀಡಿ ನೊಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸುದುಪಯೋಗ ಪಡೆದುಕೊಳ್ಳುವಂತೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2024-25ನೇ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಭಂಧಿಸಿದಂತೆ, ಕೇಂದ್ರ ಸರ್ಕಾರದ ಬೆಂಬಲ ಬೆಲೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹಧನ 450 ರೂ. ಪ್ರತಿ ಕ್ವಿಂಟಾಲಗೆ, ಸೇರಿ ಒಟ್ಟು 8,000 ರೂ. ಪ್ರತಿ ಕ್ವಿಂಟಾಲ ರಂತೆ ತೊಗರಿ ಖರೀದಿಸಲು ಅವರು ಭರವಸೆ ನೀಡಿದ್ದರು. 

ತೊಗರಿ ಖರೀದಿಯ ನೊಂದಣಿ ಅವಧಿ ಮಾರ್ಚ್ ತಿಂಗಳಾಂತ್ಯದವರೆಗೆ ವಿಸ್ತರಣೆ 
''ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತೊಗರಿ ಖರೀದಿಯ ನೋಂದಣಿ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಣೆ ಮಾಡಲಾಗಿದೆ. ಇದುವರೆಗೆ ನೋಂದಣಿ ಮಾಡಿಕೊಳ್ಳದ ರೈತರು ತಕ್ಷಣ ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲೂಕು ಹುಟ್ಟುವಳಿ ಸಹಕಾರ ಸಂಘಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು!" 


ಶಿವಾನಂದ ಪಾಟೀಲ್, ಕೃಷಿ ಮಾರುಕಟ್ಟೆ ಸಚಿವರು 

]]>
Thu, 20 Mar 2025 15:19:40 +0530 shivuagrico
Belevime&ಈ ಜಿಲ್ಲೆಗಳ 1.86 ಲಕ್ಷ ರೈತರ  ಖಾತೆಗೆ 91.93 ಕೋಟಿ ಬೆಳೆವಿಮೆ ಪರಿಹಾರ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Belevime-1954 https://krushirushi.in/Belevime-1954 Belevime-ಈ ಜಿಲ್ಲೆಗಳ 1.86 ಲಕ್ಷ ರೈತರ  ಖಾತೆಗೆ 91.93 ಕೋಟಿ ಬೆಳೆವಿಮೆ ಪರಿಹಾರ ಜಮಾ

ಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿ ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86ಲಕ್ಷ ರೈತರಿಗೆ 91.93ಕೋಟಿ ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ರಾಜ್ಯಾದ್ಯಂತ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 4.09 ಲಕ್ಷ ರೈತರು ತೊಗರಿ ಬೆಳೆಗೆ ವಿಮೆ ಮಾಡಿಸಿದ್ದಾರೆ. ಇದರ ಪೈಕಿ, ಕಲಬುರಗಿ ಜಿಲ್ಲೆಯಲ್ಲಿ 1.70 ಲಕ್ಷ ರೈತರು, ವಿಜಯಪುರ ಜಿಲ್ಲೆಯಲ್ಲಿ 1.08 ಲಕ್ಷ ರೈತರು, ಬೆಳಗಾವಿ ಜಿಲ್ಲೆಯಲ್ಲಿ 1213 ರೈತರು ಬೀದ‌ರ್ ಜಿಲ್ಲೆಯಲ್ಲಿ 82384 ರೈತರು ಮತ್ತು ಯಾದಗಿರಿ ಜಿಲ್ಲೆಯಲ್ಲಿ 6390 ರೈತರು, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿದ್ದಾರೆ. 


ಸ್ಥಳೀಯ ವಿಕೋಪದಡಿ ರಾಜ್ಯಾದ್ಯಂತ ತೊಗರಿ ಬೆಳೆದ 1.86ಲಕ್ಷ ರೈತರಿಗೆ 91.93ಕೋಟಿ ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಸಚಿವರು ವಿವರ ಒದಗಿಸಿದರು. 

ಕಲಬುರಗಿ ಜಿಲ್ಲೆಯ 1.69ಲಕ್ಷ ರೈತರಿಗೆ ರೂ.70.47 ಕೋಟಿ ವಿಮಾ ಪರಿಹಾರವನ್ನು ಇತ್ಯರ್ಥಪಡಿಸಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ಕೊಲ್ಲೋತ್ತರ ಬೆಳೆ ನಷ್ಟಕ್ಕಾಗಿ 2.74 ಕೋಟಿ ವಿಮೆ ಪರಿಹಾರ ಇತ್ಯರ್ಥಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಪೈಕಿ, ಕಲಬುರಗಿ ಜಿಲ್ಲೆಯ 2.54 ಕೋಟಿ ಒಳಗೊಂಡಿರುತ್ತದೆ ಎಂದು ಅವರು ಸದನಕ್ಕೆ ಉತ್ತರ ನೀಡಿದರು.

ಕಲ್ಬುರ್ಗಿ ಜಿಲ್ಲೆಯಲ್ಲಿ 6.27 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆಯಾಗಿದ್ದು ನವೆಂಬರ್ ನಲ್ಲಿ ವಾಡಿಕೆಗಿಂತ ಅಧಿಕ ಮಳೆ ಕೊರತೆ ಉಂಟಾಗಿದೆ. ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸಮೀಕ್ಷೆಗಳ ಪ್ರಕಾರ ಶೇಕಡಾ 1.82 ಲಕ್ಷ ಹೆಕ್ಟೇ‌ರ್ ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅದೇ ರೀತಿ ವಿಜಯಪುರ ಜಿಲ್ಲೆಯಲ್ಲಿ ನವೆಂಬರ್ ತಿಂಗಳಿನಲ್ಲಿ ಶೇಕಡಾ 80 ರಷ್ಟು ಮಳೆ ಕೊರತೆಯಾಗಿದ್ದು ಜೊತೆಗೆ ಅಕ್ಟೋಬರ್ ಎರಡನೇ ವಾರದಿಂದ ಮಂಜಿನ ಭಾದೆ ಕೂಡಾ ತೀವ್ರಗೊಂಡು ಹೂವುಗಳು ಉದುರಿವೆ. 

ಬೆಳಗಾವಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 14,529 ಹೆಕ್ಟೇ‌ರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ನವೆಂಬ‌ರ್ ಮಾಹೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆ ಉಂಟಾಗಿದೆ. ಇದೇ ರೀತಿ ಬೀದರ್ ನಲ್ಲಿ 2236 ಹೆಕ್ಟೇ‌ರ್ ಪ್ರದೇಶದಲ್ಲಿ ತೊಗರಿಬೆಳೆ ಒಣಗಿರುವ ಬಗ್ಗೆ ವರದಿಯಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 194.20 ಹೆಕ್ಟೇ‌ರ್ ಪ್ರದೇಶದಲ್ಲಿ ತೊಗರಿಬೆಳೆ ಹಾನಿಯಾಗಿದೆ ಎಂದು ಸಚಿವರು ವಿವರ ಒದಗಿಸಿದರು.

ವಿಜಯಪುರ ಜಿಲ್ಲೆಯಲ್ಲಿ ಅಂದಾಜು 5.35ಲಕ್ಷ ಹೆಕ್ಟೇ‌ರ್ ಪ್ರದೇಶದಲ್ಲಿ ಬಿತ್ತನೆಗೊಂಡಿರುತ್ತದೆ. ಜಿಲ್ಲೆಯಲ್ಲಿ ಸಾಮಾನ್ಯವಾಗಿ 2024ರ ನವೆಂಬರ್ ತಿಂಗಳಿನಲ್ಲಿ ವಾಡಿಕೆಯಂತೆ 21 ಮಿ. ಮೀ ಮಳೆಯಾಗಬೇಕಿದ್ದು, ಆದರೆ, ಕೇವಲ ವಾಸ್ತವವಾಗಿ 4.1 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.80 ರಷ್ಟು ಮಳೆ ಕೊರತೆಯಾಗಿರುತ್ತದೆ. 

ಬೆಳೆ ಕಟಾವು ಆದ ನಂತರ ಇಳುವರಿ ಆಧಾರದ ಮೇಲೆ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯ(Pradan mantri fasal bheema yojane) ಮಾರ್ಗಸೂಚಿ ಅನ್ವಯ ಬೆಳೆ ವಿಮೆ ಇತ್ಯರ್ಥಪಡಿಸಲಾಗುವುದು. ತೊಗರಿ ಬೆಳೆಯ ಬೆಳೆ ಕಟಾವು ಪ್ರಯೋಗಗಳು ಪೂರ್ಣವಾದ ತರುವಾಯ, ಇಳುವರಿಯಲ್ಲಿ ಕುಂಠಿತವಾಗುವ ಪ್ರಮಾಣವನ್ನು ಅಂದಾಜಿಸಬಹುದಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು.

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Thu, 20 Mar 2025 06:55:42 +0530 shivuagrico
Bele sala manna&13,669 ರೈತರಿಗೆ 589.12 ಕೋಟಿ ಶೂನ್ಯ ಬಡ್ಡಿದರ ಸಾಲ, ಇಲ್ಲಿಯವರೆಗೂ ಯಾರಿಗೆ ಎಷ್ಟು ಸಾಲ ಮನ್ನಾ ಆಗಿದೆ ಚೆಕ್ ಮಾಡಿ https://krushirushi.in/Bele-sala-manna-1951 https://krushirushi.in/Bele-sala-manna-1951

Bele sala manna-13,669 ರೈತರಿಗೆ 589.12 ಕೋಟಿ ಶೂನ್ಯ ಬಡ್ಡಿದರ ಸಾಲ, ಇಲ್ಲಿಯವರೆಗೂ ಯಾರಿಗೆ ಎಷ್ಟು ಸಾಲ ಮನ್ನಾ ಆಗಿದೆ ಚೆಕ್ ಮಾಡಿ

ಅರ್ಹತೆ ಇರುವ ರೈತ : ಫಲಾಬುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಿಳಿಸಿದರು. 


ವಿಧಾನ ಪರಿಷತ್ತಿನ ಪ್ರಶೋತ್ತರ ಕಲಾಪದ ವೇಳೆ ಪರಿಷತ್‌ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನ ಆಯವ್ಯಯ ಮಂಡನೆ ಸಂದರ್ಭದಲ್ಲಿ ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ ಬೆಳೆ ಸಾಲದ ಮಿತಿಯನ್ನು ರೂ.3.00 ಲಕ್ಷದಿಂದ ರೂ. 5.00 ಲಕ್ಷ ಏರಿಸಲಾಗಿದ್ದು, ಈ ಮಿತಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು 2023-24ನೇ ಸಾಲಿನಲ್ಲಿ 6,744 ರೈತರಿಗೆ ರೂ. 290.51 ಕೋಟಿ ಮತ್ತು 2024-25ನೇ ಸಾಲಿನಲ್ಲಿ 2025ನೇ ಫೆಬ್ರವರಿ 28 ರ ವರೆಗೆ 13,689 ರೈತರಿಗೆ ರೂ 589.12 ಕೋಟಿ ಮೊತ್ತದ ಸಾಲ ವಿತರಿಸಲಾಗಿರುತ್ತದೆ

2024-25ನೇ ಸಾಲಿನಲ್ಲಿ 21.78 ಲಕ್ಷ ರೈತರಿಗೆ 18,960 ಕೋಟಿ ರೂ. ಕೃಷಿ ಸಾಲ(crop loan) ವಿತರಿಸಲಾಗಿದೆ. ರಿಯಾಯತಿ ಬಡ್ಡಿ ದರದಲ್ಲಿ ನೀಡುವ ಪುನರ್ಧನದ ಮಿತಿಯನ್ನು ನಬಾರ್ಡ್‌ ಶೇ.58ರಷ್ಟು ಕಡಿಮೆ ಮಾಡಿದ್ದರೂ ಸಹ, ನಿಗದಿತ ಗುರಿಯನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ. ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲವನ್ನು(Bele sala) ವಿತರಿಸುವ ಗುರಿಯನ್ನು ಹೊಂದಲಾಗಿದೆ.

2023-24ನೇ ಸಾಲಿನ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದಂತೆ, ಡಿಸಿಸಿ (DCC) ಹಾಗೂ ಪಿಕಾರ್ಡ್‌ (PCARD) ಬ್ಯಾಂಕುಗಳಿಗೆ ಸಂಬಂಧಿಸಿದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ 240 ಕೋಟಿ ರೂ. ಬಡ್ಡಿಯನ್ನು ಮನ್ನಾ (Bele sala baddi manna)ಮಾಡಲಾಗಿದೆ.


ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list


ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.


ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.

ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ

ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ/farmer" ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು/Submit" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ

ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ

ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ

]]>
Wed, 19 Mar 2025 21:13:09 +0530 shivuagrico
Bele sala baddi manna&ಈ 2 ಬ್ಯಾಂಕ್ ಗಳಲ್ಲಿ ಸಾಲ ಮಾಡಿದವರಿಗೆ ಬಡ್ಡಿ ಮನ್ನಾ ಘೋಷಿಸಿದ ಸಿಎಂ ಸಿದ್ದರಾಮಯ್ಯ https://krushirushi.in/Bele-sala-baddi-manna-1950 https://krushirushi.in/Bele-sala-baddi-manna-1950 Bele sala baddi manna-ಈ 2 ಬ್ಯಾಂಕ್ ಗಳಲ್ಲಿ ಸಾಲ ಮಾಡಿದವರಿಗೆ ಬಡ್ಡಿ ಮನ್ನಾ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಅರ್ಹತೆ ಇರುವ ರೈತ : ಫಲಾಬುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಿಳಿಸಿದರು. 


ವಿಧಾನ ಪರಿಷತ್ತಿನ ಪ್ರಶೋತ್ತರ ಕಲಾಪದ ವೇಳೆ ಪರಿಷತ್‌ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನ ಆಯವ್ಯಯ ಮಂಡನೆ ಸಂದರ್ಭದಲ್ಲಿ ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ ಬೆಳೆ ಸಾಲದ ಮಿತಿಯನ್ನು ರೂ.3.00 ಲಕ್ಷದಿಂದ ರೂ. 5.00 ಲಕ್ಷ ಏರಿಸಲಾಗಿದ್ದು, ಈ ಮಿತಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು 2023-24ನೇ ಸಾಲಿನಲ್ಲಿ 6,744 ರೈತರಿಗೆ ರೂ. 290.51 ಕೋಟಿ ಮತ್ತು 2024-25ನೇ ಸಾಲಿನಲ್ಲಿ 2025ನೇ ಫೆಬ್ರವರಿ 28 ರ ವರೆಗೆ 13,689 ರೈತರಿಗೆ ರೂ 589.12 ಕೋಟಿ ಮೊತ್ತದ ಸಾಲ ವಿತರಿಸಲಾಗಿರುತ್ತದೆ

2024-25ನೇ ಸಾಲಿನಲ್ಲಿ 21.78 ಲಕ್ಷ ರೈತರಿಗೆ 18,960 ಕೋಟಿ ರೂ. ಕೃಷಿ ಸಾಲ(crop loan) ವಿತರಿಸಲಾಗಿದೆ. ರಿಯಾಯತಿ ಬಡ್ಡಿ ದರದಲ್ಲಿ ನೀಡುವ ಪುನರ್ಧನದ ಮಿತಿಯನ್ನು ನಬಾರ್ಡ್‌ ಶೇ.58ರಷ್ಟು ಕಡಿಮೆ ಮಾಡಿದ್ದರೂ ಸಹ, ನಿಗದಿತ ಗುರಿಯನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ. ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲವನ್ನು(Bele sala) ವಿತರಿಸುವ ಗುರಿಯನ್ನು ಹೊಂದಲಾಗಿದೆ.

2023-24ನೇ ಸಾಲಿನ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದಂತೆ, ಡಿಸಿಸಿ (DCC) ಹಾಗೂ ಪಿಕಾರ್ಡ್‌ (PCARD) ಬ್ಯಾಂಕುಗಳಿಗೆ ಸಂಬಂಧಿಸಿದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ 240 ಕೋಟಿ ರೂ. ಬಡ್ಡಿಯನ್ನು ಮನ್ನಾ (Bele sala baddi manna)ಮಾಡಲಾಗಿದೆ.

ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list


ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.


ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.

ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ

ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ/farmer" ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು/Submit" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ

ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ

ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ

]]>
Wed, 19 Mar 2025 14:38:35 +0530 shivuagrico
Bele vime&ಈ ಜಿಲ್ಲೆಯ ರೈತರಿಗೆ ಏಳು ದಿನದ ಒಳಗಡೆ ಬೆಳೆವಿಮೆ ಪಾವತಿಸಲು ಆದೇಶ,ಇಲ್ಲದಿದ್ದರೆ ಕಂಪನಿಯೊಂದಿಗೆ ದಂಡ ಸಮೇತ ವಸೂಲಿ https://krushirushi.in/Bele-vime-1949 https://krushirushi.in/Bele-vime-1949 Bele vime-ಈ ಜಿಲ್ಲೆಯ ರೈತರಿಗೆ ಏಳು ದಿನದ ಒಳಗಡೆ ಬೆಳೆವಿಮೆ ಪಾವತಿಸಲು ಕೊರ್ಟ್ ಸೂಚನೆ


2023-24ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆಯ(WBCIS) ಪರಿಹಾರವನ್ನು ಉತ್ತರ ಕನ್ನಡ ಜಿಲ್ಲೆಯ ರೈತರಿಗೆ ನೀಡದ ಹಿನ್ನೆಲೆಯಲ್ಲಿ, ಸಂಸದನಾಗಿ ಕೇಂದ್ರ ಸರಕಾರದ ಗಮನಕ್ಕೆ ತಂದಿರುವುದಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಇದನ್ನು ಪರಿಗಣಿಸಿ ಕೇಂದ್ರ ಸರಕಾರವು 6-3-2025ರಂದು ಕ್ಷೇಮಾ ಇನ್ಸೂರೆನ್ಸ್ ಕಂಪನಿಗೆ ಒಂದು ವಾರದಲ್ಲಿ ಪರಿಹಾರ ವಿತರಿಸುವಂತೆ ಆದೇಶಿಸಿತು.

ಆದರೆ, ವಿಮಾ ಕಂಪನಿಯವರು ಪುನರ್ ಪರಿಶೀಲನೆಗಾಗಿ ಮನವಿ ಸಲ್ಲಿಸಿದ್ದನ್ನು ಕೇಂದ್ರ ಸರಕಾರ ತಿರಸ್ಕರಿಸಿ, ಮತ್ತೆ ಸ್ಪಷ್ಟ ಆದೇಶ ನೀಡಿದೆ. ಏಳು ದಿನದೊಳಗೆ ಪರಿಹಾರ ವಿತರಿಸದಿದ್ದರೆ, ಕಂಪನಿಯ ಮೇಲೆ ಆಡಳಿತಾತ್ಮಕ ಕ್ರಮ ಮತ್ತು ದಂಡ ವಿಧಿಸಲಾಗುವುದು ಎಂದು ಸೂಚಿಸಿದೆ ಎಂದು ಸಂಸದರು ತಿಳಿಸಿದ್ದಾರೆ.

Bele vime-ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Tue, 18 Mar 2025 22:16:50 +0530 shivuagrico
Bele parihara list&ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ,ನಿಮಗೇಷ್ಟು ಜಮಾ ಚೆಕ್ ಮಾಡಿ https://krushirushi.in/Bele-parihara-list-1948 https://krushirushi.in/Bele-parihara-list-1948 Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Tue, 18 Mar 2025 18:55:31 +0530 shivuagrico
Bele vime&ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Bele-vime-1947 https://krushirushi.in/Bele-vime-1947 Bele vime-ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Tue, 18 Mar 2025 06:31:18 +0530 shivuagrico
Kuri sakanike yojane&90% ಸಬ್ಸಿಡಿಯಲ್ಲಿ 10+1 ಕುರಿ,ಮೇಕೆ,ಟಗರು ಸಾಕಾಣಿಕೆಗೆ ಅರ್ಜಿ ಆಹ್ವಾನ https://krushirushi.in/Kuri-sakanike-yojane-1946 https://krushirushi.in/Kuri-sakanike-yojane-1946 Kuri sakanike yojane-90% ಸಬ್ಸಿಡಿಯಲ್ಲಿ 10+1 ಕುರಿ,ಮೇಕೆ,ಟಗರು ಸಾಕಾಣಿಕೆಗೆ ಅರ್ಜಿ ಆಹ್ವಾನ-Sheep farming scheme 


ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ನಿಯಮಿತದ ವತಿಯಿಂದ 2024-25 ನೇ ಸಾಲಿನ ಗಿರಿಜನ ಉಪ ಯೋಜನೆಯಡಿಯಲ್ಲಿ ಕುರಿ/ಮೇಕೆ ಘಟಕ ಪೂರೈಕೆ ಯೋಜನೆಗೆ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಪಂಗಡದ ಸದಸ್ಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
16 ರಿಂದ 60 ವರ್ಷದೊಳಗಿನ ಮಹಿಳಾ/ಪುರುಷ ಸದಸ್ಯರು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಡಿ 10 ಸುಧಾರಿತ ಹೆಣ್ಣು ಕುರಿ/ಮೇಕೆ, ಟಗರು/ಹೋತ ಒಟ್ಟು ಘಟಕ ದರ ರೂ.66,000/ಗಳಿದ್ದು, ಶೇ.90 ರಷ್ಟು ಸಹಾಯಧನ ಹೊಂದಿರುತ್ತದೆ.

ಹೆಚ್ಚಿನ ವಿವರಗಳಿಗೆ ಹತ್ತಿರದಲ್ಲಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ಅಥವಾ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿತು ಮತ್ತು ಅಭಿವೃದ್ದಿ ನಿಗಮ, ನಿಯಮಿತ ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕುರಿತು ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Koli sakanike-ಉಚಿತ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ


ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ.


ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕೋಳಿ ಮರಿಗಳನ್ನು ವಿತರಿಸಲಾಗುವುದು. ಜೇನು, ಕುರಿ, ಹಸು ಸಾಕಾಣಿಕೆಗೆ ಪ್ರೋತ್ಸಾಹ ನೀಡುತ್ತಿರುವ ಮಾದರಿಯಲ್ಲಿ ನಾಟಿ ಕೋಳಿ ಸಾಕಾಣಿಕೆ ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬಡ ಕುಟುಂಬಗಳ ಮಹಿಳೆಯರಿಗೆ ತಲಾ 20 ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುವುದು. ಪ್ರತಿ ತಾಲೂಕಿಗೆ 106 ಫಲಾನುಭವಿಗಳಂತೆ ಗುರಿ ನಿಗದಿಪಡಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿನ ರೈತ ಮಹಿಳೆಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘದ ಮಹಿಳಾ ಸದಸ್ಯರಿಗೆ, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಯೋಜನೆಯಡಿ ಆದ್ಯತೆ ನೀಡಲಾಗುವುದು.

ನಾಟಿ ಕೋಳಿಗಳಿಗೆ ಪ್ರಸ್ತುತ ಬೇಡಿಕೆ ಹೆಚ್ಚಾಗಿದೆ. ಇವುಗಳ ಸಾಕಾಣೆಗೆ ಹೆಚ್ಚು ಖರ್ಚಾಗುವುದಿಲ್ಲ. ಮನೆ ಮುಂದೆ ಹಿತ್ತಲುಗಳಲ್ಲಿ ಕೋಳಿ ಸಾಕಬಹುದು, ವೆಚ್ಚಕ್ಕಿಂತ ಅಧಿಕ ಲಾಭ ಸಿಗುತ್ತದೆ. ಇವುಗಳ ಸಾಕಾಣಿಕೆಗೆ ಹೆಚ್ಚಿನ ಶ್ರಮ ಅಗತ್ಯವಿರುವುದಿಲ್ಲ. ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಆರ್ಥಿಕ ಸಬಲತೆ ಸಾಧಿಸಲು ತಲಾ 20 ಕೋಳಿ ಮರಿ ವಿತರಿಸಲಾಗುವುದು ಎಂದು ಹೇಳಲಾಗಿದೆ.

1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming 

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ(Vetarnary department)ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.



ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್‌ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.

ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Vetarnary department schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?

ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ


ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.

ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy - https://krushirushi.in/Cattle-shed-subsidy-scheme-1630 

ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.


ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು

ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.


ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.


ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.

ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.


ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.

ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.


ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahvs.karnataka.gov.in/info-2/Schemes+&+Benefits/kn

]]>
Mon, 17 Mar 2025 06:06:49 +0530 shivuagrico
Free vegetable seed kit&ರೈತರಿಗೆ ಉಚಿತವಾಗಿ 2 ಸಾವಿರ ಮೊತ್ತದ ತರಕಾರಿ ಬೀಜ ವಿತರಣೆಗೆ ಅರ್ಜಿ ಆಹ್ವಾನ https://krushirushi.in/Free-vegetable-seed-kit-1945 https://krushirushi.in/Free-vegetable-seed-kit-1945 Free vegetable seed kit-ರೈತರಿಗೆ ಉಚಿತವಾಗಿ 2 ಸಾವಿರ ಮೊತ್ತದ ತರಕಾರಿ ಬೀಜ  ವಿತರಣೆಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ರೂ. 2000/- ಮೊತ್ತದ ತರಕಾರಿ ಬೀಜಗಳ ಕಿಟ್‌ನ್ನು ವಿತರಣೆ ಮಾಡಲಾಗುತ್ತಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಂದ ಅರ್ಜಿ ಆಹ್ವಾನಿಸಿದೆ.


ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಆಧಾರ್‌ಕಾರ್ಡ್ ಜೇರಾಕ್ಸ್, ಬ್ಯಾಂಕ್ ಪಾಸ್ ಬುಕ್ ಜೇರಾಕ್ಸ್, ಜಾತಿ ಪ್ರಮಾಣ ಪತ್ರ(ಪ.ಜಾ/ಪ.ಪಂ.ದವರಿಗೆ ಮಾತ್ರ) ಗಳನ್ನು ಸಲ್ಲಿಸಿ ತರಕಾರಿ ಬೀಜಗಳ ಕಿಟ್‌ನ್ನು ಪಡೆಯುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Horticulture-department-schemes

ತೋಟಗಾರಿಕೆ ಇಲಾಖೆಯಿಂದ(Horticulture department schemes) ಸಣ್ಣ ಟ್ರ್ಯಾಕ್ಟ‌ರ್(Mini  tractor)
• ಡ್ರಾಗನ್ ಪೂಟ್(Dragon fruit), ಈರುಳ್ಳಿ ಶೇಖರಣಾ ಘಟಕಕ್ಕೆ (Onion storage)ಸಹಾಯಧನ
• ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ(green house) ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ  ನೀರುಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.


ಎಲ್ಲಿ ಅರ್ಜಿ ಸಲ್ಲಿಸಬೇಕು

ಆಸಕ್ತ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ (Horticulture department)ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ಅರ್ಜಿದಾರರ ಅಧಾರ್ ಕಾರ್ಡ್‌ ಪ್ರತಿ.
• ಬ್ಯಾಂಕ್‌ ಪಾಸ್ ಬುಕ್ ಪ್ರತಿ.
• ಪೋಟೋ.
• ಪಹಣಿ/ಉತಾರ್/RTC.
ರೇಷನ್ ಕಾರ್ಡ ಪ್ರತಿ.
ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.


ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM);

ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(Pradna mantri krishi sinchayi yojane);

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ(drip irrigation) ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್‍ರವರೆಗೆ ಶೇಕಡಾ 90%) ಸಹಾಯಧನ.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ (NAREGA)ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ(PMKVY) ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ(NHM) ಸಮುದಾಯ ಕೃಷಿಹೊಂಡ(Farm pond), ಕೃಷಿಹೊಂಡ, ಪ್ಯಾಕ್‌ಹೌಸ್(Pack house), ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್‌ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) (Fiber doti)ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


 ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾ‌ರ್ ಕಾರ್ಡ್ (Aadhaar card) ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ

https://horticulturedir.karnataka.gov.in/info-2/Facilities+available+to+farmers/kn



ಹೆಚ್ಚಿನ ಮಾಹಿತಿಗಾಗಿ  ತೋಟಗಾರಿಕೆ ಇಲಾಖೆ ಕಚೇರಿಯನ್ನು
ಸಂಪರ್ಕಿಸುವುದು. 

]]>
Sun, 16 Mar 2025 16:22:42 +0530 shivuagrico
1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ&Dairy farming https://krushirushi.in/Dairy-farming-1944 https://krushirushi.in/Dairy-farming-1944 1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming 

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು(Cow) ಅಥವಾ ಎಮ್ಮೆ(Buffelow) ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್‌ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.


ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Vetarnary department schemes 2025-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?

ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ


ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.

ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.


ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು

ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.


ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.


ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.

ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.


ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.

ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.


ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahvs.karnataka.gov.in/info-2/Schemes+&+Benefits/kn

National livestock mission 2024-ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆ,ಕುರಿ,ಕೋಳಿ,ಮೇಕೆ,ಹಂದಿ ಸಾಕಾಣೆಕೆಗೆ ಅರ್ಜಿ ಆಹ್ವಾನ

ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ, ಮೇಕೆ, ಹಂದಿ ಸಾಕಾಣಿಕೆ ಮತ್ತು ರಸಮೇವು ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.

National livestock mission 


ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ

(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)


 ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.


 ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.

ಅವಶ್ಯಕ ದಾಖಲಾತಿಗಳು :-

1)ಆಧಾರ,

2)ಪಹಣಿ ಪತ್ರ

3)ಬ್ಯಾಂಕ್‌ಖಾತೆ ಸಂಖ್ಯೆ,

ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು

4)ಭಾವ ಚಿತ್ರ.



ಕ್ರ.ಸಂ 

ಘಟಕ 

ಸೌಲಭ್ಯಗಳ ವಿವರ

 

 ಹೈನುಗಾರಿಕೆ 

 

1

ಮಿಶ್ರತಳಿ ದನಗಳ ನಿರ್ವಹಣೆ (1+1)

ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ

 

ಆ. ಸುಧಾರಿತ ಎಮ್ಮೆಗಳ ನಿರ್ವಹಣೆ 
 (1+1)

ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ

 

 ಕುರಿ ಸಾಕಾಣಿಕೆ 

 

2

ಕುರಿಗಳ ನಿರ್ವಹಣೆ (10+01)

 ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ

 

ಕುರಿಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ

 

ಟಗರುಗಳ ನಿರ್ವಹಣೆ (10)

ರೂ. 13,000 ರಂತೆ ಸಾಲ ಸೌಲಭ್ಯ

 

 ಟಗರುಗಳ ನಿರ್ವಹಣೆ (20)

ರೂ. 26,000 ರಂತೆ ಸಾಲ ಸೌಲಭ್ಯ

 

ಮೇಕೆ ಸಾಕಾಣಿಕೆ 

 

3

ಮೇಕೆಗಳ ನಿರ್ವಹಣೆ (10+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ

 

ಮೇಕೆಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ

4

ಹಂದಿ ಸಾಕಾಣಿಕೆ (10)

ರೂ,60,000 ರಂತೆ ಸಾಲ ಸೌಲಭ್ಯ

 

           ಕೋಳಿ ಸಾಕಾಣಿಕೆ 

 

5

ಮಾಂಸದ ಕೋಳಿ ಸಾಕಾಣಿಕೆ

2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ

 

 ಮೊಟ್ಟೆ ಕೋಳಿ ಸಾಕಾಣಿಕೆ

1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.

ಈ ಮಾಹಿತಿ ನಿಮಗೆ ಉಪಯೋಗವಾಗಿದ್ದರೆ ಬೇರೆಯವರಿಗೂ ಹಂಚಿಕೊಳ್ಳಿ ಧನ್ಯವಾದಗಳು

]]>
Sun, 16 Mar 2025 06:16:35 +0530 shivuagrico
Gruhalakshmi list&ಈ ಪಟ್ಟಿಯಲ್ಲಿರುವವರಿಗೆ ಕೊನೆಗೂ ಒಟ್ಟಿಗೆ ಜಮಾ ಆಯ್ತು ಗೃಹಲಕ್ಷ್ಮಿ ಪೇಂಡಿಂಗ್ ಹಣ https://krushirushi.in/Gruhalakshmi-list-1942 https://krushirushi.in/Gruhalakshmi-list-1942 Gruhalakshmi list-ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಯ್ತು ಗೃಹಲಕ್ಷ್ಮಿ ಪೇಂಡಿಂಗ್ ಹಣ

ಫೆಬ್ರವರಿ.21ರಂದು ಈ ವಿಷಯವಾಗಿ ಮಾತನಾಡಿದ್ದಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕ‌ರ್ ಅವರು, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದಿದ್ದರು. 


ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದಿದ್ದರು.

ಅದರಂತೆ ಇಂದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ರೂ.4000  ಬಾಕಿ ಹಣವನ್ನು ಬ್ಯಾಂಕ್‌ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ. ಇಂದು ಅನೇಕ ಯಜಮಾನಿ ಮಹಿಳೆಯರ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗಿರುವುದಾಗಿ ತಿಳಿದು ಬಂದಿದೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಳ‌ರ್ ಅವರು, ಈಗಾಗಲೇ ನವೆಂಬ‌ರ್ ತಿಂಗಳ ಹಣವನ್ನು ಎಲ್ಲರ ಅಕೌಂಟ್‌ಗೆ ಹಾಕಿದ್ದೇವೆ. ಡಿಸೆಂಬರ್ ಮತ್ತು ಜನವರಿ ಎರಡು ತಿಂಗಳದ್ದು ಬಾಕಿ ಇದೆ. ಡಿಸೆಂಬರ್‌ದು ಇವತ್ತು ಬಿಲ್ಲಿಂಗ್‌ ನಡೀತಾ ಇದೆ. ನಾಲೈದು ದಿನದಲ್ಲಿ ಮಹಿಳೆಯರ ಅಕೌಂಟ್‌ಗೆ ಹಣ ಜಮಾವಣೆ ಆಗುತ್ತದೆ. ಡಿಸೆಂಬರ್ ಮುಗಿಸಿದ ತಕ್ಷಣ ಜನವರಿ ಮತ್ತು ಫೆಬ್ರವರಿ ತಿಂಗಳದ್ದು ಮತ್ತೆ ತಗೋತೀವಿ. ಆ ಬಳಿಕ ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ಹೇಳಿದರು.


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Sat, 15 Mar 2025 06:22:13 +0530 shivuagrico
Vasathi yojane&ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ 1 ಲಕ್ಷ ರೂಪಾಯಿ ನೆರವು, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ https://krushirushi.in/Vasathi-yojane-1941 https://krushirushi.in/Vasathi-yojane-1941 Vasathi yojane-ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ 1 ಲಕ್ಷ ರೂಪಾಯಿ ನೆರವು, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

ರಾಜ್ಯ ಸರ್ಕಾರ ವಸತಿ ರಹಿತರಿಗೆ ಗುಡ್ ನ್ಯೂಸ್ ನೀಡಿದ್ದು, ಈ ವರ್ಷ 2.30 ಲಕ್ಷ ಮನೆಗಳ ನಿರ್ಮಾಣ ಮಾಡುವುದಾಗಿ ಘೋಷಿಸಿದೆ.

ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 1.80 ಲಕ್ಷ ಮನೆಗಳು ಮಂಜೂರಾಗಿದ್ದು, ಮೊದಲ ಹಂತದಲ್ಲಿ 36,789, ಎರಡನೇ ಹಂತದಲ್ಲಿ 39,843 ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗಿದೆ.

ಉಳಿದ 1.30 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ 46 ಸಾವಿರ ಮನೆ ಸೇರಿ ಈ ವರ್ಷ 2.30 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವರಾದ ಜಮೀರ್ ಅಹಮದ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

 ಯೋಜನೆಯ ಹೆಸರು- ಪ್ರಧಾನ ಮಂತ್ರಿ ಆವಾಸ್ ( ಗ್ರಾಮೀಣ ಪ್ರದೇಶಗಳಲ್ಲಿ  ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ವಸತಿ ಕಲ್ಪಿಸುವ ಯೋಜನೆ)

 ಸಹಾಯಧನದ ಮೊತ್ತ

 ಎಸ್ ಸಿ ಎಸ್ ಟಿ
 ಕೇಂದ್ರದ ಪಾಲು -72,000
 ರಾಜ್ಯದ ಪಾಲು-78,000
 ಒಟ್ಟು -1,50,000

 ಸಾಮಾನ್ಯ ವರ್ಗದವರಿಗೆ
 ಕೇಂದ್ರದ ಪಾಲು-72,000
 ರಾಜ್ಯದ ಪಾಲು-48,000
 ಒಟ್ಟು -1,20,000

 ಫಲಾನುಭವಿಯ ಸ್ವಸಹಾಯವಂತಿಕೆ

ಎಲ್ಲಾ ವರ್ಗದ ಫಲಾನುಭವಿಗಳಿಗೆ ಕನಿಷ್ಠ ಒಂದು ಲಕ್ಷ
 ಈ ಯೋಜನೆ ಅಡಿಯಲ್ಲಿ ಒದಗಿಸಲಾಗುವ ಆರ್ಥಿಕ ಸಹಾಯದ ಜೊತೆಗೆ ಫಲಾನುಭವಿಯು ಕನಿಷ್ಠ 30,000 ಗಳನ್ನು ಅಥವಾ ತನ್ನ ಸಾಮರ್ಥ್ಯ ಹಾಗೂ ವಸತಿಯ ಅವಶ್ಯಕತೆಗೆ ಅನುಸಾರವಾಗಿ ಸಾಧ್ಯವಾದಷ್ಟು ಸ್ವಂತ ಉಳಿತಾಯ ಹೂಡಿಕೆ ಮಾಡಿ ಹೆಚ್ಚಿನ ಹಾಗೂ ಉತ್ತಮ ಸೌಲಭ್ಯಗಳನ್ನು ಹೊಂದಬಹುದು

 ಡಿ ಆರ್ ಐ ಯಡಿ ಸಾಲ ಮತ್ತು ಬಡ್ಡಿಯ ದರ

 ಈ ಯೋಜನೆಯಡಿ ಸ್ಥಳೀಯ ಬ್ಯಾಂಕಿನಿಂದ 20000 ವರೆಗೆ ನಾಲ್ಕು ಪರ್ಸೆಂಟ್ ವಾರ್ಷಿಕ ಬಡ್ಡಿ ದರದಲ್ಲಿ ಸಾಲವನ್ನು ಆಯ್ಕೆಯಾದ ಫಲಾನುಭವಿಗಳು ಪಡೆದುಕೊಳ್ಳಲು ಅವಕಾಶವಿರುತ್ತದೆ

 ಫಲಾನುಭವಿಯ ಆಯ್ಕೆ

 ಕೇಂದ್ರ ಸರ್ಕಾರದಿಂದ ನೀಡಲಾದ ಫಲಾನುಭವಿಗಳ ಪಟ್ಟಿಯಿಂದ ನಿಯಮಾನುಸಾರ ಗ್ರಾಮ ಸಭೆಯಲ್ಲಿ ಆಯ್ಕೆ ಮಾಡಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಪಟ್ಟಿಗೆ ಅನುಮೋದನೆ ಪಡೆಯಲಾಗುವುದು. ನಂತರ ಸಂಬಂಧಪಟ್ಟ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಯ ಅನುಮೋದನೆಯೊಂದಿಗೆ ನಿಗಮದ ಅನುಮೋದನೆ ನೀಡಲಾಗುವುದು.

 ಯೋಜನೆಯ ಅನುಷ್ಠಾನ

 ಪ್ರತಿ ವರ್ಷ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಗುರಿಗನುಗುಣವಾಗಿ ಗುರಿ ನಿಗದಿಪಡಿಸಲಾಗುವುದು
 ಮೀಸಲಾತಿ-SC ST ಶೇಕಡ 60%
 ಅಲ್ಪಸಂಖ್ಯಾತ ಶೇಕಡ 15%
 ಸಾಮಾನ್ಯ ಶೇಕಡಾ 25%


  
 ಜಿಪಿಎಸ್ ತಂತ್ರಜ್ಞಾನ ಅಳವಡಿಕೆ

 2011 12 ನೇ ಸಾಲಿನಿಂದ ಜಿಪಿಎಸ್ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತಿದೆ
 ಅವ್ಯವಹಾರವನ್ನು ತಡೆಗಟ್ಟಲು ಹಾಗೂ ಸರ್ಕಾರದ ಹಣ ದುರುಪಯೋಗವಾಗದಂತೆ ನೋಡಿಕೊಂಡು ಫಲಾನುಭವಿಗಳಿಗೆ ವಸತಿ ಸೌಕರ್ಯವನ್ನು ಪಾರದರ್ಶಕತೆಯ ಮೂಲಕ ನೀಡಲು ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ಈ ತಂತ್ರಜ್ಞಾನದ ಉಪಯೋಗಗಳು ಇಂತಿವೆ

 ಪ್ರತಿ ಮನೆಯ ಪ್ರಗತಿ ಹಂತದ ಛಾಯಾಚಿತ್ರವನ್ನು ಜಿಪಿಎಸ್ ಕ್ಯಾಮೆರಾ ಮೂಲಕ ಸೆರೆ ಹಿಡಿಯುವುದು
 ಒಮ್ಮೆ ವಸತಿ ಸೌಕರ್ಯ ಪಡೆದ ಫಲಾನುಭವಿಗಳ ಪುನರಾವರ್ತನೆಗೆ ತಡೆ
 ಛಾಯಾಚಿತ್ರದ ಆಧಾರದ ಮೇಲೆ ಅನುದಾನ ಬಿಡುಗಡೆ
 ಮಾಹಿತಿಗಾಗಿ ಎಲ್ಲಾ ಮನೆಗಳ ಛಾಯಾಚಿತ್ರಗಳು ನಿಗಮದ ವೆಬ್ ಸೈಟ್ ನಲ್ಲಿ ಲಭ್ಯ
 ಹಣದ ದುರ್ಬಳಕೆಗೆ ತಡೆ

 ಅರ್ಹತೆ ಮತ್ತು ಷರತ್ತುಗಳು
 ಸಂಬಂಧಪಟ್ಟ ಗ್ರಾಮ ಪಂಚಾಯತ್ ವಾಸಿ ಆಗಿರಬೇಕು
 ಮನೆ ನಿವೇಶನ ಹಕ್ಕು ಪತ್ರವನ್ನು ಹೆಂಡತಿ ಹೆಸರಿನಲ್ಲಿ ವಿತರಿಸಬೇಕು
 ಬೇರೆ ಯಾವುದೇ ಯೋಜನೆ ಅಥವಾ ಇಲಾಖೆಯಿಂದ ಈಗಾಗಲೇ ವಸತಿ ಸೌಲಭ್ಯ ಪಡೆದಿರಬಾರದು
 ಮನೆಗಳ ವಿಸ್ತೀರ್ಣ ಮತ್ತು ವಿನ್ಯಾಸ : ಕನಿಷ್ಠ 25 ಚದರ ಮೀಟರ್ ನೆಲಗಟ್ಟು ವಿಸ್ತೀರ್ಣ ಇರುವಂತೆ ಮನೆ ನಿರ್ಮಿಸಬೇಕು. ಇದಕ್ಕಾಗಿ ಯಾವುದೇ ನಕ್ಷೆ ಅಥವಾ ವಿನ್ಯಾಸ ನಿಗದಿಪಡಿಸಿರುವುದಿಲ್ಲ. ಆದರೆ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಮಣ್ಣು ಹವಾ ಗುಣ ಪರಿಸ್ಥಿತಿ ಸ್ಥಳೀಯವಾಗಿ ಲಭ್ಯವಿರುವ ಸಾಮಗ್ರಿಗಳ ಬಳಕೆ ಇತ್ಯಾದಿ ಅಂಶಗಳನ್ನು ಪರಿಗಣಿಸಿ ಪ್ರದೇಶವಾರು ಮತ್ತು ಬದಲಿ ವಿನ್ಯಾಸಗಳನ್ನು ಅನುಸರಿಸಬಹುದು ಮನೆ ನಿರ್ಮಾಣದ ಪ್ರತಿ ಹಂತದಲ್ಲಿಯೂ ಫಲಾನುಭವಿ ಸಕ್ರಿಯವಾಗಿ ಪಾಲ್ಗೊಂಡು ಒಳ್ಳೆಯ ಗುಣಮಟ್ಟದ ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಹೊಂದಬಹುದು.
 ಒಟ್ಟಾರೆ ಆಗಿದ್ದಾಗೆ ಸರ್ಕಾರವು ವಸತಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಧಿಸಬಹುದಾದ ನಿಯಮ ಮತ್ತು ಷರತ್ತುಗಳನ್ನು ತಪ್ಪದೇ ಪಾಲಿಸಬೇಕು 

 ಮನೆ ನಿರ್ಮಾಣ ಮಾಡುವ ಕ್ರಮ
 ಸ್ವಂತ ಫಲಾನುಭವಿಗಳಿಂದ
 ಫಲಾನುಭವಿಯೇ ಸ್ವಂತ ತನ್ನ ಮನೆಯನ್ನು ಸ್ಥಳಿಯವಾಗಿ ಅನುಮೋದಿತ ನಕ್ಷೆಗಳನ್ನು ಗುಣವಾಗಿ ಕಟ್ಟಿಕೊಳ್ಳಬಹುದು( ಇದಕ್ಕಾಗಿ ಕಾಮಗಾರಿ ಆದೇಶ ಹೊರಡಿಸಿ ನಿಗದಿತ ಕಂತುಗಳಲ್ಲಿ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆ ಮೂಲಕ ನೀಡಲಾಗುವುದು ನಿರ್ಮಾಣ ಸಂಸ್ಥೆ ಮೂಲಕ ಮನೆ ನಿರ್ಮಾಣಕ್ಕೆ ಅವಕಾಶ ಇರುವುದಿಲ್ಲ )

 ಮನೆ ನಿರ್ಮಾಣ ಅವಧಿ

 ಕನಿಷ್ಠ ನಾಲ್ಕು ತಿಂಗಳ ಒಳಗಾಗಿ ಮನೆಯನ್ನು ಪೂರ್ಣಗೊಳಿಸುವುದು

 ಒದಗಿಸಬೇಕಾದ ದಾಖಲೆಗಳು
 ಫಲಾನುಭವಿಯಿಂದ
 ವಸತಿಗಾಗಿ ನಿಗದಿತ ಅರ್ಜಿ
 ನಿವೇಶನ ಅಥವಾ ಮನೆಯನ್ನು ಸಾಲ ತೀರುವವರೆಗೂ ನಿಗಮದ ಪರವಾಗಿ ಅಡಮಾನ ಪತ್ರ ಬರೆದು ಕೊಡಬೇಕು
 ಜಾತಿ ಪ್ರಮಾಣ ಪತ್ರ ಅಥವಾ ಆದಾಯ ಪ್ರಮಾಣ ಪತ್ರ

 ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಥವಾ ಕಾರ್ಯನಿರ್ವಹಣಾಧಿಕಾರಿ ಅಥವಾ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಿಂದ

 ಗ್ರಾಮ ಪಂಚಾಯಿತಿ ಅಥವಾ ಇಲಾಖೆ ಯೋಜನೆಯ ಅಡಿಯಲ್ಲಿ ನಿಯಮಗಳನ್ನು ಪಾಲಿಸಿರುವ ಬಗ್ಗೆ ಹಾಗೂ ದಾಖಲೆಗಳನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ಬಗ್ಗೆ ದೃಢೀಕರಣ ಪತ್ರ
 ನಿಗದಿಪಡಿಸಿದ ನಮೂನೆಗಳಲ್ಲಿ ಪ್ರತಿ ತಿಂಗಳು ಅಥವಾ ವರ್ಷ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಗತಿ ವರದಿಗಳನ್ನು ತಪ್ಪದೆ ಸಲ್ಲಿಸಬೇಕು
 ವಸತಿ ಯೋಜನೆಯ ಯಶಸ್ವಿ ಅನುಷ್ಠಾನದ ಬಗ್ಗೆ ಸಂಬಂಧಿಸಿದ ಇತರೆ ಮಾಹಿತಿ ಇತ್ಯಾದಿ

 ಹೆಚ್ಚಿನ ವಿವರಗಳಿಗೆ ಈ ಕೆಳಕಂಡವರನ್ನು ಸಂಪರ್ಕಿಸಿ
 ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ
 ನಂಬರ್ 1 2 3 4
 ಐ ಟಿ ಪಾರ್ಕ್ 1ನೇ ಮಾಡಿ ನಾಲ್ಕನೇ ಮುಖ್ಯ ರಸ್ತೆ ಕೈಗಾರಿಕಾ ಪ್ರದೇಶ  ರಾಜಾಜಿನಗರ-580044
 ದೂರವಾಣಿ-23118888
 ಇ-ಮೇಲ್ -[email protected]
 ವೆಬ್ ಸೈಟ್ - http://ashraya.kar.nic.in/ 

 ನಿಮ್ಮ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಪಂಚಾಯತ್
 ಆಯಾಯ ಸಂಬಂಧಿಸಿದ ಜಿಲ್ಲೆಗಳು
 ಸಂಬಂಧಪಟ್ಟ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು
 ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು

]]>
Fri, 14 Mar 2025 19:08:44 +0530 shivuagrico
FID is compulsory for crop insurance and crop loss compensation&ಜಂಟಿಖಾತೆಯಲ್ಲಿ ಇರುವ ಎಲ್ಲರಿಗೆ FID  ಕಡ್ಡಾಯ,ಮೊಬೈಲ್ ನಲ್ಲೇ ಮಾಡಿಕೊಳ್ಳಿ ನಿಮ್ಮ FID https://krushirushi.in/FID-is-compulsory-for-crop-insurance-and-crop-loss-compensation-1940 https://krushirushi.in/FID-is-compulsory-for-crop-insurance-and-crop-loss-compensation-1940 FID is compulsory for crop insurance and crop loss compensation-ಜಂಟಿಖಾತೆಯಲ್ಲಿ ಇರುವ ಎಲ್ಲರಿಗೆ FID  ಕಡ್ಡಾಯ,ಮೊಬೈಲ್ ನಲ್ಲೇ ಮಾಡಿಕೊಳ್ಳಿ ನಿಮ್ಮ FID

ಬೆಳೆವಿಮೆ(Bele vime),ಬೆಳೆಹಾನಿ ಪರಿಹಾರ(Bele parihara),ಬೆಂಬಲ ಬೆಲೆ(MSP) ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್‌ಐಡಿ(FID) ಮಾಡಿಸಲೇಬೇಕು. ಒಂದು ವೇಳೆ ಎಫ್‌ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್‌ಐಡಿ ಮಾಡದೆ ಇರುವ ಕೂಡಲೇ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್‌ಐಡಿ ಮಾಡಿಸಬೇಕು.

ಈವರೆಗೆ ಎಫ್‌ಐಡಿ ಮಾಡಿಸದೇ ಇರುವ  ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್​, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್‌ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.

ಬೆಳೆ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ(FRUITS PORTAL) ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನಿಂದ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್‍ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.

ಇದುವರೆಗೂ ಫ್ರುಟ್ಸ್ ನಲ್ಲಿ ನೊಂದಣಿ ಆಗದೇ ಇರುವ ರೈತರು ಆಧಾರ್ ಕಾರ್ಡ್, ಪಹಣಿ, ಜಾತಿ ಪ್ರಮಾಣಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ವಿವರಗಳನ್ನು ಫ್ರುಟ್ಸ್‍ನಲ್ಲಿ ದಾಖಲಿಸಿಕೊಂಡು ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಹಾಗೂ ವಿವಿಧ ಇಲಾಖೆಗಳ ಸೌಲಭ್ಯ ಪಡೆದುಕೊಳ್ಳುವಂತೆ ಕೋರಲಾಗಿದೆ.

ಫ್ರುಟ್ಸ್ ತಂತ್ರಾಂಶದಲ್ಲಿ ರೈತರು ತಮ್ಮ ಜಮೀನಿನ ವಿವರವನ್ನು ನೊಂದಾಯಿಸಿ, ರೈತರ ಗುರುತಿನ ಚೀಟಿ ಸಂಖ್ಯೆ ಪಡೆದುಕೊಳ್ಳುವುದು ಅಗತ್ಯವಾಗಿರುತ್ತದೆ. ಈ ಮಾಹಿತಿಯು ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳನ್ನು ನೀಡುವುದಲ್ಲದೆ, ಇತರೆ ಇಲಾಖೆಗಳಿಗೂ ಸಹ ಉತ್ತಮ ಮಾಹಿತಿಯಾಗಿರುತ್ತದೆ. ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಂದರ್ಭದಲ್ಲಿ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯಡಿ ಫಲಾನುಭವಿಗಳಾಗಲು ಹಾಗೂ ಪರಿಹಾರ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲು ರೈತರು ಫ್ರುಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಸಿ, ಎಫ್‍ಐಡಿ ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿದೆ.

ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಕೊಳ್ಳದೇ ಇರುವ ರೈತರು ಕೂಡಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಂಡವರು, ಅಂದರೆ ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 01 ಎಕರೆ ಮಾತ್ರ ನಮೂದಿಸಿರುತ್ತಾರೆ, ಅಂತಹವರಿಗೆ ಕೇವಲ 01 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ, ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ಪಹಣಿಯ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ ಪಾವತಿಯಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಫ್ರುಟ್ಸ್ ನೊಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳನ್ನು ಕೂಡಲೆ ಜೋಡಣೆ ಮಾಡಲು ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳು, ನಾಡ ಕಚೇರಿ, ರೈತ ಸಂಪರ್ಕ ಕೇಂದ್ರ, ರೇಷ್ಮೆ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಬಹುದು.

ನಿಮ್ಮ FID ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx 

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.

FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

 ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್‍ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.

 ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.

ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು

]]>
Fri, 14 Mar 2025 06:33:14 +0530 shivuagrico
Kusube bembala bele&ಈ ಜಿಲ್ಲೆಯ ರೈತರಿಂದ ಬೆಂಬಲ ಬೆಲೆಯಡಿ ಕುಸುಬಿ ಖರೀದಿ https://krushirushi.in/Kusube-bembala-bele-1939 https://krushirushi.in/Kusube-bembala-bele-1939 Kusube bembala bele-ಈ ಜಿಲ್ಲೆಯ ರೈತರಿಂದ ಬೆಂಬಲ ಬೆಲೆಯಡಿ ಕುಸುಬಿ ಖರೀದಿ

ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದ್ದು, ರೈತರು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಅವರು ತಿಳಿಸಿದ್ದಾರೆ.


ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಿದ್ದು, ಪ್ರತಿ ಕ್ವಿಂಟಾಲ್ ಗೆ 5,940 ರೂ.ನಿಗದಿಪಡಿಸಲಾಗಿದೆ. ಪ್ರತಿ ಎಕರೆಗೆ 5 ಕ್ವಿಂಟಾಲ್ ನಂತೆ ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಖರೀದಿ ಮಾಡಲಾಗುವುದು.

ಖರೀದಿ ಪ್ರಕ್ರಿಯೆ ನಂತರ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮಾ ಮಾಡಲಾಗುವುದು. ರೈತರು ತಮ್ಮ ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲೂಕು ಹುಟ್ಟುವಳಿ ಸಹಕಾರ ಸಂಘಗಳಲ್ಲಿ ತಮ್ಮ ಫ್ರೂಟ್ಸ್ ನ ಎಫ್‌ಐಡಿ ಸಂಖ್ಯೆ ನೀಡಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Safflower MSP-ಈ ಜಿಲ್ಲೆಯ ರೈತರಿಂದ ಬೆಂಬಲ ಬೆಲೆಯಲ್ಲಿ ಕುಸುಬಿ ಖರೀದಿ

ಕರ್ನಾಟಕದ ಕುಸುಬೆ(Safflower) ಬೆಳೆಗಾರರಿಗೆ ಸರ್ಕಾರವು ಸಂತಸದ ಸುದ್ದಿಯನ್ನು ನೀಡಿದೆ. ಮಾರುಕಟ್ಟೆಯಲ್ಲಿ ಕುಸಿದಿರುವ ಕುಸುಬೆ ಬೆಲೆಗೆ ಪರಿಹಾರವಾಗಿ, ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ ₹5,940 ದರವನ್ನು ನಿಗದಿಪಡಿಸಲಾಗಿದೆ.


ಇದರಿಂದಾಗಿ ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಕೃಷಿ ಮಾರುಕಟ್ಟೆ ಸಚಿವರು ಈ ಕುರಿತು ಮಾಹಿತಿ ನೀಡಿದ್ದು, ಮಾರುಕಟ್ಟೆಯಲ್ಲಿನ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಒಳಗಾಗಿದ್ದ ರೈತರಿಗೆ ಈ ಬೆಂಬಲ ಬೆಲೆ ಸಹಾಯ ಮಾಡಲಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಕುಸುಬೆ(Kusube) ಕಟಾವು ಪ್ರಕ್ರಿಯೆ ಆರಂಭವಾಗಿದ್ದು, ಮಾರ್ಚ್ ಅಂತ್ಯದವರೆಗೆ ನಡೆಯಲಿದೆ ಮತ್ತು ಏಪ್ರಿಲ್ ವರೆಗೂ ಮಾರುಕಟ್ಟೆಗೆ ಕುಸುಬೆ ಆವಕವಾಗಲಿದೆ.

ರೈತರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುವ ಬದಲು, ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುವಂತೆ ಸಚಿವರು ಮನವಿ ಮಾಡಿದ್ದಾರೆ.

]]>
Wed, 12 Mar 2025 23:42:48 +0530 shivuagrico
Male nakshatragalu&2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು https://krushirushi.in/Male-nakshatragalu-2025-1938 https://krushirushi.in/Male-nakshatragalu-2025-1938 Male nakshatragalu-2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು


2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-14-4-2025

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-28-4-2025

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2025

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-25-5-2025

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-6-7-2025

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-20-7-2025

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-31-8-2025

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2025

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-27-9-2025

ಉತ್ತಮ ಮಳೆ

14.ಚಿತ್ತ

ದಿನಾಂಕ-11-10-2025

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-24-10-2025

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2025

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs  ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in  website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.     

https://krushirushi.in/contact-us


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ

]]>
Wed, 12 Mar 2025 23:39:06 +0530 shivuagrico
PMFME subsidy scheme&ಪಿಎಂಎಫ್ಎಂಇ ಯೋಜನೆಯಡಿ 50% ಸಬ್ಸಿಡಿಯಲ್ಲಿ 5000 ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪನೆ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ https://krushirushi.in/PMFME-subsidy-scheme-1937 https://krushirushi.in/PMFME-subsidy-scheme-1937 PMFME-ಪಿಎಂಎಫ್ಎಂಇ ಯೋಜನೆಯಡಿ 50% ಸಬ್ಸಿಡಿಯಲ್ಲಿ 5000 ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪನೆ


ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್‌ಕ್ಯೂಬೇಷನ್‌ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.

ಪಿಎಂಎಫ್ಎಮ್ ಇ ಯೋಜನೆಯಡಿ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಅರ್ಜಿ ಆಹ್ವಾನ-pmfme subsidy scheme 

ಯಾವ ಯಾವ ಉದ್ಯಮ ಮಾಡಬಹುದು?
 ರೊಟ್ಟಿ ಮಾಡುವ ಯಂತ್ರ, ಎಣ್ಣೆಗಾಣ, ಬೆಲ್ಲದ ಗಾಣ, ಕಾರದಪುಡಿ ಘಟಕ, ಶಾವಿಗೆ, ಹಪ್ಪಳ-ಸಂಡಿಗೆ, ಹಿಟ್ಟಿನ ಗಿರಣಿ, ಬೇಕರಿ ಉತ್ಪನ್ನ, ಹಾಲಿನ ಉತ್ಪನ್ನ, ಉಪ್ಪಿನಕಾಯಿ ಸೇರಿದಂತೆ ಕಿರು ಆಹಾರ ಸಂಸ್ಕರಣೆ

 ಅರ್ಜಿ ಸಲ್ಲಿಸುವುದು ಹೇಗೆ?
 ಅರ್ಜಿ ಸಲ್ಲಿಸುವವರು http://mofpi.nic.in/pmfme/ ಪೋರ್ಟಲ್ ನಲ್ಲಿ ವಿವರಗಳನ್ನು ಭರ್ತಿ ಮಾಡಬೇಕು ಅಥವಾ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಮೂಲಕ ಕೂಡ ಅರ್ಜಿ ವಿವರಗಳನ್ನು ಭರ್ತಿ ಮಾಡಿಸಬಹುದು. ಜಿಲ್ಲಾ ಮಟ್ಟದಲ್ಲಿ ನೇಮಿಸಲ್ಪಟ್ಟ ಸಂಪನ್ಮೂಲ ವ್ಯಕ್ತಿಗಳು(District resource person) ಅರ್ಜಿ ಹಾಗೂ ಯೋಜನಾ ವರದಿ(Detail project report) ಪರಿಶೀಲಿಸಿ ಜಿಲ್ಲಾ ಮಟ್ಟದ ಸಮಿತಿಗೆ ಸಲ್ಲಿಸುತ್ತಾರೆ. ಸಮಿತಿ ಅಧ್ಯಕ್ಷರು ಜಂಟಿ ಕೃಷಿ ನಿರ್ದೇಶಕ ರಾಗಿದ್ದು, ಸದರಿ ಅರ್ಜಿಗಳನ್ನು ಸಮಿತಿಯಲ್ಲಿಟ್ಟು ಅರ್ಹ ಫಲಾನುಭವಿಗಳ ಆಯ್ಕೆ ಮಾಡಿಕೊಂಡು, ಬ್ಯಾಂಕ್ಗಳಿಗೆ ಸಾಲ ಮಂಜೂರಾತಿಗಾಗಿ ಕಳುಹಿಸುತ್ತಾರೆ. ಸಂಸ್ಥೆಗಳ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಸಮಿತಿಯು ನೋಡಲ ಏಜೆನ್ಸಿಗೆ ವರ್ಗಾಯಿಸುತ್ತದೆ ಹಾಗೂ ಅರ್ಜಿದಾರರಿಗೆ ಮಾಹಿತಿ ನೀಡಲು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸಹಕರಿಸುತ್ತಾರೆ. ಒಂದು ವೇಳೆ ಅರ್ಜಿಗಳು ಸಂಸ್ಥೆಗಳಿಂದ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಮಟ್ಟದ ಸಮಿತಿ ವರದಿ ಸಲ್ಲಿಸುತ್ತದೆ.ರಾಜ್ಯ ಮಟ್ಟದ ಸಮಿತಿಗೆ ಸಲ್ಲಿಸುತ್ತದೆ. 15 ಲಕ್ಷಕ್ಕೂ ಹೆಚ್ಚು ಸಹಾಯಧನ ಬೇಕಾಗಿದ್ದಲ್ಲಿ ಸದರಿ ಅರ್ಜಿಗಳನ್ನು ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ಯಮಗಳ ಮಂತ್ರಾಲಯಕ್ಕೆ ಅನುಮೋದನೆಗಾಗಿ ಕಳುಹಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್(Aadhar card)
ಪ್ಯಾನ್ ಕಾರ್ಡ್(Pan card)
ಬ್ಯಾಂಕ್ ಪಾಸಬುಕ್(Bank passbook)

PMFME-ಕಿರು ಆಹಾರ ಉದ್ಯಮ ಸ್ಥಾಪನೆಗೆ 50% ಸಬ್ಸಿಡಿ,ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ಜಿಲ್ಲೆಗಳ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ (DRP contact number) ಸಂಪರ್ಕ ಸಂಖ್ಯೆ ತಿಳಿಯಲು ಈ ಕೆಳಗಿನ pdf download ಮಾಡಿಕೊಳ್ಳಿ
]]>
Wed, 12 Mar 2025 18:51:04 +0530 shivuagrico
Free sheep training&ಉಚಿತ ಊಟ ವಸತಿಯೊಂದಿಗೆ 10 ದಿನಗಳ ಕುರಿ ಸಾಕಾಣಿಕೆ ತರಬೇತಿ&Uchitha Kuri sakanike tharabethi https://krushirushi.in/Free-sheep-training-1936 https://krushirushi.in/Free-sheep-training-1936 Free sheep training-ಉಚಿತ ಊಟ ವಸತಿಯೊಂದಿಗೆ 10 ದಿನಗಳ ಕುರಿ ಸಾಕಾಣಿಕೆ ತರಬೇತಿ-Uchitha Kuri sakanike tharabethi

 

ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ ಹತ್ತು ದಿನಗಳ ಕಾಲ ಕುರಿ ಸಾಕಾಣಿಕೆ ತರಬೇತಿಯನ್ನು ದಿನಾಂಕ 2/4/2025 ರಿಂದ 11/4/2025 ವರೆಗೆ ಹಮ್ಮಿಕೊಳ್ಳಲಾಗಿದೆ.


ತರಬೇತಿಯಲ್ಲಿ ಕಲಿಸುವ ವಿಷಯಗಳು
1)ಕುರಿ ತಳಿಗಳು

2)ಕುರಿಗೆ  ಬರುವಂತಹ ವಿವಿಧ ರೋಗಗಳು 
3)ಕುರಿಗಳನ್ನು ಕೊಬ್ಬಿಸುವ ವಿಧಾನ 
4)ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಹಿತಿ
5)ವಿವಿಧ ಔಷಧ ಉಪಚಾರಗಳು 
6)ಕುರಿ ಶಡ್ ನಿರ್ಮಾಣ
7)ಲೋನ್ ಗಳ ಮಾಹಿತಿ 
8)ಸಬ್ಸಿಡಿಗಳ ಮಾಹಿತಿ 
9) ಪ್ರಾಜೆಕ್ಟ್ ರಿಪೋರ್ಟ್ ಮಾಹಿತಿ 
10) ಮನೆಮದ್ದುಗಳ ಮಾಹಿತಿ 

 ಇನ್ನು ಇತರೆ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು 

 ಆಸಕ್ತರು ಕೂಡಲೇ ಕೆಳಗಡೆ ನಮೂದಿಸಿದ ಮೊಬೈಲ್ ನಂಬರ್ ಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಿ 
8660219375

.

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಇರುವ ಲೀಡ್ ಬ್ಯಾಂಕ್ ತರಬೇತಿ ಕೇಂದ್ರಗಳಲ್ಲಿ ತರಭೇತಿ ಆಯೋಜಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಲೀಡ್ ಬ್ಯಾಂಕ್ ಸಂಪರ್ಕಿಸಿ

]]>
Wed, 12 Mar 2025 14:34:24 +0530 shivuagrico
Pmkisan eligibility&ತುಂಡು ಕೃಷಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರಿಗೂ ಪಿಎಂ ಕಿಸಾನ್ ಹಣ&ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್,ಹಾಗಾದರೆ ಅರ್ಹತೆಯ ಮಾನದಂಡಗಳೇನು? https://krushirushi.in/Pmkisan-eligibility-1935 https://krushirushi.in/Pmkisan-eligibility-1935 Pmkisan eligibility-ತುಂಡು ಕೃಷಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರಿಗೂ ಪಿಎಂ ಕಿಸಾನ್ ಹಣ-ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್


ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ(Pradan mantri kisan samman yojane) 
ಅಡಿ ಅರ್ಹ ಎಲ್ಲ ರೈತರಿಗೆ ಸೌಲಭ್ಯ ನೀಡಲು ಕೇಂದ್ರ ಸರ್ಕಾರ ಸಿದ್ದವಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಹೇಳಿದರು.


ಲೋಕಸಭೆಯಲ್ಲಿ ಮಂಗಳವಾರ ಪ್ರಶೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಭೂ ರಹಿತರಿಗೆ ಈ ಸೌಲಭ್ಯ ನೀಡುವುದಿಲ್ಲ. ಆದರೆ, ತುಂಡು ಕೃಷಿ ಭೂಮಿಯನ್ನಾದರೂ ಹೊಂದಿರಬೇಕು ಎಂದು ವಿವರಿಸಿದರು. 


'ಈ ಯೋಜನೆಯಡಿ ಕೇಂದ್ರ ಸರ್ಕಾರವು ಈವರೆಗೆ 19 ಕಂತುಗಳಲ್ಲಿ ₹3.68 ಲಕ್ಷ ಕೋಟಿ ಮೊತ್ತವನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದೆ' ಎಂದರು. 


ಯೋಜನೆಯ ಭಾಗವಾಗಿಲ್ಲದ ಎಲ್ಲ ಅರ್ಹ ರೈತರಿಗೆ ವಾರ್ಷಿಕ ₹6,000 ನಗದು ಪ್ರಯೋಜನ ನೀಡಲು ಸರ್ಕಾರ ಸಿದ್ಧವಾಗಿದೆ. ಅಂತಹ ರೈತರಿಗೆ ಹಿಂದಿನ ಕಂತುಗಳನ್ನು ನೀಡಲು ಸಿದ್ಧರಿದ್ದೇವೆ. ಅಂತಹ ರೈತರನ್ನು ಗುರುತಿಸಿ ಯೋಜನೆಯಲ್ಲಿ ಸೇರಿಸಲು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಅವರು ಕೋರಿದರು.

ಪಿಎಂ ಕಿಸಾನ್(kisan samman) ಅರ್ಹತೆಯ ಮಾನದಂಡಗಳೇನು?
ಎಲ್ಲ ಅರ್ಹ ಫಲಾನುಭವಿಗಳು ಕನಿಷ್ಠ ಪ್ರಮಾಣದ ಭೂಮಿ ಹೊಂದಿರಬೇಕು. ಇ-ಕೆವೈಸಿ ಮಾಡಿಸಿಕೊಳ್ಳಬೇಕು ಮತ್ತು ಪಿಎಂ-ಕಿಸಾನ್ ಪೋರ್ಟಲ್‌ನಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು. 
ನಿಧಿಯನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಗಾಯಿಸಲಾಗುತ್ತದೆ ಎಂದು ಅವರು ಹೇಳಿದರು.

ಇಲ್ಲಿಯವರೆಗೂ 19 ಕಂತುಗಳಲ್ಲಿ 3.68 ಲಕ್ಷ ಕೋಟಿ ಪಿಎಂ ಕಿಸಾನ್ ಹಣ ರೈತರ ಖಾತೆಗೆ


ಇದುವರೆಗೆ 3.68 ಲಕ್ಷ ಕೋಟಿ ರೂಪಾಯಿಗಳನ್ನು 19 ಕಂತುಗಳಲ್ಲಿ ದೇಶದಾದ್ಯಂತದ ರೈತರಿಗೆ ವಿತರಿಸಲಾಗಿದೆ

ನಿಮಗೇಷ್ಟು ಜಮಾ ಹೀಗೆ ಚೆಕ್ ಮಾಡಿ-Pmkisan beneficiary status 

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/

ಮೊದಲು know your status ಮೇಲೆ ಕ್ಲಿಕ್ ಮಾಡಿ

ನಂತರ know your register number ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ

ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.

ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ

ನಂತರ update your details ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ

 Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.

ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ

Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.

FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ  ಕಾರಣ ಮತ್ತು ಪರಿಹಾರ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

fruitspmk.gov.in ಪೋರ್ಟಲ್ ನಲ್ಲಿ

1

ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ

ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು                                                                     ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು

ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ  (NIC)                     ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ.            ಆ) ಸಮಸ್ಯಾತ್ಮಕ  ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ.

2

ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು

ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ

ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ    ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ

3

ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು

 ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ

ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ   ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ

4

ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ

ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ

OPERATOR ಲಾಗಿನ್ (RSK, ADA office, JDA office)  OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು

5

01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ

ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ

ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ)

6

Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು

ಜಿಲ್ಲೆಗಳಲ್ಲಿ  OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ

AAO ಲಾಗಿನ್  (RSK, ADA office, JDA office)  AAO ಲಾಗಿನ್ನಲ್ಲಿ  ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ,  ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

7

ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ

ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ)

AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.

8

PFMS rejected

Aadhaar Number is not seeded in NPCI

ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ

Bank Name And IFSC Code are not related to each other

ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ

Bank Name is not as per PFMS Bank Master.

Beneficiary is rejected as Account Type is other than SB / SBA / JD

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ)

Duplicate Beneficiary Name , Bank Account No and Bank Name not allowed for same scheme

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

IFSC Code  either not present or currently inactive in tbl BankBranch

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

Incorrect Aadhaar Number

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

One or more mandatory tags values are missing.

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

Rejected by Bank, Account No does not exist in Bank/INVALID/CLOSED

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

9

Amount credited to Account Number-NA

Aadhaar number based payment by GoI

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ.

10

PAYMENT STOPPED BY STATE

 XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳಿದ್ದರೆ ಕೇಂದ್ರ ಕಚೇರಿ ಮಾಹಿತಿ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

11

Transaction failed

ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ.

12

ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ

OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳ   ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

13

ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು

ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ.

ಕೇಂದ್ರ ಸರ್ಕಾರ ದ   pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ.

]]>
Wed, 12 Mar 2025 06:24:44 +0530 shivuagrico
ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಗೆ ಸಮಿತಿ ರಚನೆ,ಅನರ್ಹ ಬಿಪಿಎಲ್ ಕಾರ್ಡ್ ನಲ್ಲಿ ನಿಮ್ಮ ಹೆಸರಿದ್ದರೆ ಅನ್ನಭಾಗ್ಯ,ಗೃಹಲಕ್ಷ್ಮಿ ಹಣ ಬಂದ್&Cancelled suspended ration card list https://krushirushi.in/Cancelled-suspended-ration-card-list-1934 https://krushirushi.in/Cancelled-suspended-ration-card-list-1934 ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಗೆ ಸಮಿತಿ ರಚನೆ, ಅನರ್ಹ ಬಿಪಿಎಲ್ ಕಾರ್ಡ್ ನಲ್ಲಿ ನಿಮ್ಮ ಹೆಸರಿದ್ದರೆ ಅನ್ನಭಾಗ್ಯ,ಗೃಹಲಕ್ಷ್ಮಿ ಹಣ ಬಂದ್-Cancelled suspended ration card list

ರಾಜ್ಯ ಸರ್ಕಾರದಿಂದ ಅನರ್ಹರ ರೇಷನ್ ಕಾರ್ಡ಼್(Cancelled ration card list)ಈಗಾಗಲೇ ಒಂದಷ್ಟು ರದ್ದುಗೊಳಿಸಲಾಗಿದೆ. ಈಗ ಮುಂದುವರೆದು ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಹಚ್ಚೋದಕ್ಕೆ ಸಮಿತಿ ರಚನೆ ಮಾಡಿದೆ.

ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅವರಿಗೆ ಸಿಗುತ್ತಿರುವ ಸೌಲಭ್ಯವನ್ನು ಅರ್ಹರಿಗೆ ದೊರಕಿಸಿಕೊಡುವ ಸದುದ್ದೇಶದಿಂದ ಗ್ರಾಮ ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

Cancelled ration card list-ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ,ಇಲ್ಲಿದೆ ರದ್ದಾದ ರೇಷನ್ ಕಾರ್ಡ್ ಲಿಸ್ಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ e-Ration Card ಮೇಲೆ ಕ್ಲಿಕ್ ಮಾಡಿ

ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ ಮೇಲೆ ಕ್ಲಿಕ್ ಮಾಡಿ,Go ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ರದ್ದಾದ ರೇಷನ್ ಕಾರ್ಡ್ ಪಟ್ಟಿ ದೊರೆಯಲಿದೆ

ಸ್ವಂತ ಕಾರು ಇರುವವರಿಗೆ 'BPL' ಕಾರ್ಡ್ ಇಲ್ಲ ಎಂದು ಆಹಾರ ಸಚಿವ K.H ಮುನಿಯಪ್ಪಮಹತ್ವದ ಘೋಷಣೆ ಮಾಡಿದ್ದಾರೆ.


ಇಂದು ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವರು ಸ್ವಂತ ಕಾರು ಇರುವವರಿಗೆ 'BPL' ಕಾರ್ಡ್ ಇಲ್ಲ, ಸ್ವಂತ ಕಾರು ಇರುವವರಿಗೆ 'BPL' ಕಾರ್ಡ್ ನೀಡದಿರಲು ಚಿಂತನೆ ನಡೆಸಲಾಗಿದೆ ಎಂದು K.H ಮುನಿಯಪ್ಪಮಹತ್ವದ ಘೋಷಣೆ ಮಾಡಿದ್ದಾರೆ.

ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ, ಯೆಲ್ಲೋ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದನ್ನು ವಾಪಸ್ಸು ಪಡೆಯಲು ಚಿಂತನೆ ನಡೆಸಲಾಗುತ್ತಿದೆ ಎಂದರು.ಅದೇ ರೀತಿ ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ K.H ಮುನಿಯಪ್ಪ ಹೇಳಿದರು. ನೀತಿ ಸಂಹಿತಿ ಜಾರಿ ಹಿನ್ನೆಲೆ ರೇಷನ್ ಕಾರ್ಡ್ ವಿತರಣೆ ಸ್ಥಗಿತವಾಗಿತ್ತು. ಈಗ ಹೊಸ ಪಡಿತರ ಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಜೊತೆಗೆ ಪಡಿತರಕಾರ್ಡ್ ಗೆ ಕೂಡಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ ಎಂದರು.

ಪಡಿತರದಾರರಿಗೆ ಸೆಪ್ಟೆಂಬರ್ ತಿಂಗಳಿನಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಆಂಧ್ರ ಹಾಗೂ ತೆಲಂಗಾಣ ಅಕ್ಕಿ ನೀಡಲು ಮುಂದಾಗಿದೆ, ಒಂದು ವಾರದಲ್ಲಿ ಅಲ್ಲಿನ ಅಧಿಕಾರಿಗಳು ಅಕ್ಕಿ ನೀಡುವ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ . ಆಹಾರ ನಿಗಮದ ದರದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡಿದ್ದೇವೆ, ಕೆಜಿಗೆ 34 ರೂ ದರದಲ್ಲಿ ಅಕ್ಕಿ ನೀಡುವಂತೆ ಕೇಳಿದ್ದೇವೆ. ಸದ್ಯ, 5 ಕೆಜಿ ಅಕ್ಕಿ ಬದಲಾಗಿ ಜನರಿಗೆ ಹಣ ಹಾಕುತ್ತಿದ್ದೇವೆ, ಸೆಪ್ಟೆಂಬರ್ ತಿಂಗಳಿನಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.5 ಕೆಜಿ ಅಕ್ಕಿ ಬದಲು ಇದುವರೆಗೆ 1 ಕೋಟಿ ಕುಟುಂಬಕ್ಕೆ 556 ಕೋಟಿ ಹಣ ಜಮಾ ಮಾಡಲಾಗಿದೆ ಎಂದರು.

Annabhagya amount-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಅಗಸ್ಟ 10 ರಂದು ಅನ್ನಭಾಗ್ಯ ಅಕ್ಕಿ ಮತ್ತು ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

5 ಸದಸ್ಯರಿರುವ ಕುಟುಂಬಕ್ಕೆ 850 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

]]>
Tue, 11 Mar 2025 19:01:53 +0530 shivuagrico
Bele parihara list&ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ,ನಿಮಗೇಷ್ಟು ಜಮಾ ಚೆಕ್ ಮಾಡಿ https://krushirushi.in/Bele-parihara-list-1933 https://krushirushi.in/Bele-parihara-list-1933 Bele parihara-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Tue, 11 Mar 2025 06:45:14 +0530 shivuagrico
Gruhalakshmi list&ಕೊನೆಗೂ ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಯ್ತು 2 ತಿಂಗಳ ಗೃಹಲಕ್ಷ್ಮಿ ಹಣ https://krushirushi.in/Gruhalakshmi-list-1932 https://krushirushi.in/Gruhalakshmi-list-1932 Gruhalakshmi list-ಕೊನೆಗೂ ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಯ್ತು 2 ತಿಂಗಳ ಗೃಹಲಕ್ಷ್ಮಿ ಹಣ

ಫೆಬ್ರವರಿ.21ರಂದು ಈ ವಿಷಯವಾಗಿ ಮಾತನಾಡಿದ್ದಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕ‌ರ್ ಅವರು, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದಿದ್ದರು. 


ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದಿದ್ದರು.

ಅದರಂತೆ ಇಂದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ರೂ.4000  ಬಾಕಿ ಹಣವನ್ನು ಬ್ಯಾಂಕ್‌ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ. ಇಂದು ಅನೇಕ ಯಜಮಾನಿ ಮಹಿಳೆಯರ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗಿರುವುದಾಗಿ ತಿಳಿದು ಬಂದಿದೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಳ‌ರ್ ಅವರು, ಈಗಾಗಲೇ ನವೆಂಬ‌ರ್ ತಿಂಗಳ ಹಣವನ್ನು ಎಲ್ಲರ ಅಕೌಂಟ್‌ಗೆ ಹಾಕಿದ್ದೇವೆ. ಡಿಸೆಂಬರ್ ಮತ್ತು ಜನವರಿ ಎರಡು ತಿಂಗಳದ್ದು ಬಾಕಿ ಇದೆ. ಡಿಸೆಂಬರ್‌ದು ಇವತ್ತು ಬಿಲ್ಲಿಂಗ್‌ ನಡೀತಾ ಇದೆ. ನಾಲೈದು ದಿನದಲ್ಲಿ ಮಹಿಳೆಯರ ಅಕೌಂಟ್‌ಗೆ ಹಣ ಜಮಾವಣೆ ಆಗುತ್ತದೆ. ಡಿಸೆಂಬರ್ ಮುಗಿಸಿದ ತಕ್ಷಣ ಜನವರಿ ಮತ್ತು ಫೆಬ್ರವರಿ ತಿಂಗಳದ್ದು ಮತ್ತೆ ತಗೋತೀವಿ. ಆ ಬಳಿಕ ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ಹೇಳಿದರು.


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Mon, 10 Mar 2025 20:29:53 +0530 shivuagrico
Milk incentive status&ರೈತರ ಖಾತೆಗೆ ಬಾಕಿ ಹಾಲಿನ ಪ್ರೋತ್ಸಾಹಧನ ಜಮಾ https://krushirushi.in/Milk-incentive-status-1931 https://krushirushi.in/Milk-incentive-status-1931 Milk incentive status-ರೈತರ ಖಾತೆಗೆ ಬಾಕಿ ಹಾಲಿನ ಪ್ರೋತ್ಸಾಹಧನ ಜಮಾ

ರಾಜ್ಯದ 8.90 ಲಕ್ಷ ಹಾಲು ಉತ್ಪಾದಕರಿಗೆ ₹288 ಕೋಟಿ ಪ್ರೋತ್ಸಾಹಧನ ನೇರ ಖಾತೆಗೆ ಜಮೆ

Milk incentive status-ಇಲ್ಲಿಯವರೆಗೂ ಜಮಾ ಆಗಿರುವ ಹಾಲಿನ ಪ್ರೋತ್ಸಾಹಧನ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ "ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಪ್ರೋತ್ಸಾಹಧನ ಮಾಹಿತಿ ಸಿಗಲಿದೆ.

ಹೀಗೂ ಚೆಕ್ ಮಾಡಬಹುದು

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/Klda/MilkIncentive?ServiceId=5399&Type=TABLE&DepartmentId=3119

ನಂತರ ನಿಮ್ಮ ಜಿಲ್ಲೆ,ತಾಲೂಕು,Milk Union,ಗ್ರಾಮ, select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ನಿಮ್ಮ ಗ್ರಾಮದಲ್ಲಿ ಯಾರಿಗೆಲ್ಲಾ ಎಷ್ಟು ಹಾಲಿನ ಪ್ರೋತ್ಸಾಹಧನ(Milk incentive) ಬಂದಿದೆ ಎಂದು ತಿಳಿಯಲಿದೆ

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732

]]>
Sun, 09 Mar 2025 22:58:08 +0530 shivuagrico
Bele sala baddi manna&ಈ 2 ಬ್ಯಾಂಕ್ ಗಳಲ್ಲಿ ಸಾಲ ಮಾಡಿದವರಿಗೆ ಬಡ್ಡಿ ಮನ್ನಾ ಘೋಷಿಸಿದ ಸಿಎಂ ಸಿದ್ದರಾಮಯ್ಯ https://krushirushi.in/Bele-sala-baddi-manna-1930 https://krushirushi.in/Bele-sala-baddi-manna-1930 Bele sala baddi manna-ಈ 2 ಬ್ಯಾಂಕ್ ಗಳಲ್ಲಿ ಸಾಲ ಮಾಡಿದವರಿಗೆ ಬಡ್ಡಿ ಮನ್ನಾ ಘೋಷಿಸಿದ ಸಿಎಂ ಸಿದ್ದರಾಮಯ್ಯ


2024-25ನೇ ಸಾಲಿನಲ್ಲಿ 21.78 ಲಕ್ಷ ರೈತರಿಗೆ 18,960 ಕೋಟಿ ರೂ. ಕೃಷಿ ಸಾಲ(crop loan) ವಿತರಿಸಲಾಗಿದೆ. ರಿಯಾಯತಿ ಬಡ್ಡಿ ದರದಲ್ಲಿ ನೀಡುವ ಪುನರ್ಧನದ ಮಿತಿಯನ್ನು ನಬಾರ್ಡ್‌ ಶೇ.58ರಷ್ಟು ಕಡಿಮೆ ಮಾಡಿದ್ದರೂ ಸಹ, ನಿಗದಿತ ಗುರಿಯನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ. ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲವನ್ನು(Bele sala) ವಿತರಿಸುವ ಗುರಿಯನ್ನು ಹೊಂದಲಾಗಿದೆ.

2023-24ನೇ ಸಾಲಿನ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದಂತೆ, ಡಿಸಿಸಿ (DCC) ಹಾಗೂ ಪಿಕಾರ್ಡ್‌ (PCARD) ಬ್ಯಾಂಕುಗಳಿಗೆ ಸಂಬಂಧಿಸಿದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ 240 ಕೋಟಿ ರೂ. ಬಡ್ಡಿಯನ್ನು ಮನ್ನಾ (Bele sala baddi manna)ಮಾಡಲಾಗಿದೆ.

ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list


ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.


ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.

ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ

ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ/farmer" ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು/Submit" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ

ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ

ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ

]]>
Sun, 09 Mar 2025 19:23:38 +0530 shivuagrico
February month Annabhagya amount&ಫೆಬ್ರುವರಿ ತಿಂಗಳ ಅನ್ನಭಾಗ್ಯ ಹಣ ಜಮಾ, ನಿಮಗೇಷ್ಟು ಜಮಾ ಆಯ್ತು ಚೆಕ್ ಮಾಡಿ https://krushirushi.in/February-month-Annabhagya-amount-1924 https://krushirushi.in/February-month-Annabhagya-amount-1924 February month Annabhagya amount-ಫೆಬ್ರುವರಿ ತಿಂಗಳ ಅನ್ನಭಾಗ್ಯ ಹಣ ಜಮಾ, ನಿಮಗೇಷ್ಟು ಜಮಾ ಆಯ್ತು ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ(e-status) ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ(DBT status) ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ಸೂಚನೆ-ಜಿಲ್ಲೆ select ಮಾಡುವಾಗ ತಪ್ಪಾಗಿ ಬೇರೆ ಜಿಲ್ಲೆ select ಮಾಡಿದರೆ ಈ ಕೆಳಗಿನಂತೆ No data found ಎಂದು ತೋರಿಸುತ್ತದೆ. ಅದಕ್ಕಾಗಿ ಸರಿಯಾದ ಜಿಲ್ಲೆಯನ್ನು select ಮಾಡಿ)

ನಂತರ ನೇರ ನಗದು ವರ್ಗಾವಣೆ ಸ್ಥಿತಿ (Status of DBT) ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್(Ration card number) ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ (Annabhagya amount)ಮೊತ್ತವನ್ನು ತೋರಿಸುತ್ತದೆ

ಹೀಗೂ ಚೆಕ್ ಮಾಡಬಹುದು

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಅನ್ನಭಾಗ್ಯ(Annabhagya scheme)ಮೇಲೆ ಕ್ಲಿಕ್ ಮಾಡಿ

ನಂತರ ಇಲ್ಲಿಯವರೆಗೂ ಜಮಾ ಆದ ಅನ್ನಭಾಗ್ಯ ಹಣ(Annabhagya amount)ಮಾಹಿತಿ ಸಿಗಲಿದೆ.

]]>
Sun, 09 Mar 2025 06:40:06 +0530 shivuagrico
Bele sala manna&37 ಲಕ್ಷ ರೈತರಿಗೆ 28,000 ಕೋಟಿ ಕಡಿಮೆ ಬಡ್ಡಿ ದರದ ಸಾಲ ವಿತರಣೆ,ಹಾಗಾದರೆ ಇಲ್ಲಿಯವರೆಗೂ ಯಾರಿಗೆ ಎಷ್ಟು ಸಾಲ ಮನ್ನಾ ಮಾಡಲಾಗಿದೆ? https://krushirushi.in/Bele-sala-manna-1929 https://krushirushi.in/Bele-sala-manna-1929 Bele sala manna-37 ಲಕ್ಷ  ರೈತರಿಗೆ 28,000 ಕೋಟಿ ಕಡಿಮೆ ಬಡ್ಡಿ ದರದ ಸಾಲ ವಿತರಣೆ,ಹಾಗಾದರೆ ಇಲ್ಲಿಯವರೆಗೂ ಯಾರಿಗೆ ಎಷ್ಟು ಸಾಲ ಮನ್ನಾ ಮಾಡಲಾಗಿದೆ?


2024-25ನೇ ಸಾಲಿನಲ್ಲಿ 21.78 ಲಕ್ಷ ರೈತರಿಗೆ 18,960 ಕೋಟಿ ರೂ. ಕೃಷಿ ಸಾಲ(crop loan) ವಿತರಿಸಲಾಗಿದೆ. ರಿಯಾಯತಿ ಬಡ್ಡಿ ದರದಲ್ಲಿ ನೀಡುವ ಪುನರ್ಧನದ ಮಿತಿಯನ್ನು ನಬಾರ್ಡ್‌ ಶೇ.58ರಷ್ಟು ಕಡಿಮೆ ಮಾಡಿದ್ದರೂ ಸಹ, ನಿಗದಿತ ಗುರಿಯನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ. ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲವನ್ನು(Bele sala) ವಿತರಿಸುವ ಗುರಿಯನ್ನು ಹೊಂದಲಾಗಿದೆ.

2023-24ನೇ ಸಾಲಿನ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದಂತೆ, ಡಿಸಿಸಿ (DCC) ಹಾಗೂ ಪಿಕಾರ್ಡ್‌ (PCARD) ಬ್ಯಾಂಕುಗಳಿಗೆ ಸಂಬಂಧಿಸಿದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ 240 ಕೋಟಿ ರೂ. ಬಡ್ಡಿಯನ್ನು ಮನ್ನಾ (Baddi manna)ಮಾಡಲಾಗಿದೆ.

ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list


ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.


ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.

ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ

ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ/farmer" ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು/Submit" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ

ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ

ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ

]]>
Sat, 08 Mar 2025 06:29:34 +0530 shivuagrico
Anugraha yojane&ಅನುಗ್ರಹ ಯೋಜನೆಯಡಿ ಜಾನುವಾರು ಪರಿಹಾರ ಮೊತ್ತ ಹೆಚ್ಚಳ, ಯಾವುದಕ್ಕೆ ಎಷ್ಟು ಪರಿಹಾರ ಹೆಚ್ಚಳ? https://krushirushi.in/Anugraha-yojane-1928 https://krushirushi.in/Anugraha-yojane-1928 Anugraha yojane-ಅನುಗ್ರಹ ಯೋಜನೆಯಡಿ ಜಾನುವಾರು ಪರಿಹಾರ ಮೊತ್ತ ಹೆಚ್ಚಳ

ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ "ಅನುಗ್ರಹ" ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂ. ಗಳಿಂದ 15,000 ರೂ. ಗಳಿಗೆ; ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 5,000 ರೂ. ಗಳಿಂದ 7,500 ರೂ. ಗಳಿಗೆ ಹಾಗೂ 3-6 ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 3,500 ರೂ.ಗಳಿಂದ 5,000 ರೂ.ಗಳಿಗೆ ಹೆಚ್ಚಿಸಲಾಗುವುದು.

ಕೃಷಿ ಮತ್ತು ಹೈನುಗಾರಿಕೆ ಒಂದನ್ನೊಂದು ಅವಲಂಬಿಸಿಕೊಂಡಿವೆ. ಬರದಿಂದಾಗಿ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿರುವುದರಿಂದ ಸಹಜವಾಗಿಯೇ ಇದು ಹೈನುಗಾರಿಕೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ.

ಹೈನುಗಾರ ಕುಟುಂಬಗಳನ್ನು ಈ ಸಂಕಷ್ಟದಿಂದ ಪಾರುಮಾಡುವ ಉದ್ದೇಶದಿಂದ ಕುರಿ, ಮೇಕೆ, ಹಸು ಮುಂತಾದ ಜಾನುವಾರುಗಳು ಆಕಸ್ಮಿಕ ಮರಣಕ್ಕೆ ತುತ್ತಾದರೆ ಅದರ ಮಾಲೀಕರಿಗೆ ಆರ್ಥಿಕ ಪರಿಹಾರ ನೀಡುವ ಅನುಗ್ರಹ ಯೋಜನೆಗೆ ಮರುಚಾಲನೆ ನೀಡಲಾಗಿದೆ, ಹಾಲಿಗೆ ನೀಡುವ ಪ್ರೋತ್ಸಾಹಧನದಿಂದ 24 ಲಕ್ಷ ಹೈನುಗಾರರಿಗೆ ಅನುಕೂಲವಾಗಿದೆ, ಸಾಕುಪ್ರಾಣಿಗಳನ್ನು ಬಾಧಿಸುವ ವಿವಿಧ ಮಾರಕ ರೋಗಗಳನ್ನು ತಡೆಗಟ್ಟಲು 2.6 ಕೋಟಿಗೂ ಅಧಿಕ ಲಸಿಕೆ ಹಾಕಲಾಗಿದೆ. ಹೀಗೆ ನಾಡಿನ ಹೈನುಗಾರರ ರಕ್ಷಣೆಗೆ ನಮ್ಮ ಸರ್ಕಾರ ಕಂಕಣಬದ್ಧವಾಗಿ ಶ್ರಮಿಸುತ್ತಿದೆ ಎಂದು ತಿಳಿಸಿದ್ದಾರೆ.

]]>
Fri, 07 Mar 2025 22:32:04 +0530 shivuagrico
PMFME subsidy scheme&ಪಿಎಂಎಫ್ಎಂಇ ಯೋಜನೆಯಡಿ 50% ಸಬ್ಸಿಡಿಯಲ್ಲಿ 5000 ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪನೆ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ https://krushirushi.in/PMFME-subsidy-scheme-1927 https://krushirushi.in/PMFME-subsidy-scheme-1927 PMFME-ಪಿಎಂಎಫ್ಎಂಇ ಯೋಜನೆಯಡಿ 50% ಸಬ್ಸಿಡಿಯಲ್ಲಿ 5000 ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪನೆ


ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್‌ಕ್ಯೂಬೇಷನ್‌ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.

ಪಿಎಂಎಫ್ಎಮ್ ಇ ಯೋಜನೆಯಡಿ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಅರ್ಜಿ ಆಹ್ವಾನ-pmfme subsidy scheme 

ಯಾವ ಯಾವ ಉದ್ಯಮ ಮಾಡಬಹುದು?
 ರೊಟ್ಟಿ ಮಾಡುವ ಯಂತ್ರ, ಎಣ್ಣೆಗಾಣ, ಬೆಲ್ಲದ ಗಾಣ, ಕಾರದಪುಡಿ ಘಟಕ, ಶಾವಿಗೆ, ಹಪ್ಪಳ-ಸಂಡಿಗೆ, ಹಿಟ್ಟಿನ ಗಿರಣಿ, ಬೇಕರಿ ಉತ್ಪನ್ನ, ಹಾಲಿನ ಉತ್ಪನ್ನ, ಉಪ್ಪಿನಕಾಯಿ ಸೇರಿದಂತೆ ಕಿರು ಆಹಾರ ಸಂಸ್ಕರಣೆ

 ಅರ್ಜಿ ಸಲ್ಲಿಸುವುದು ಹೇಗೆ?
 ಅರ್ಜಿ ಸಲ್ಲಿಸುವವರು http://mofpi.nic.in/pmfme/ ಪೋರ್ಟಲ್ ನಲ್ಲಿ ವಿವರಗಳನ್ನು ಭರ್ತಿ ಮಾಡಬೇಕು ಅಥವಾ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಮೂಲಕ ಕೂಡ ಅರ್ಜಿ ವಿವರಗಳನ್ನು ಭರ್ತಿ ಮಾಡಿಸಬಹುದು. ಜಿಲ್ಲಾ ಮಟ್ಟದಲ್ಲಿ ನೇಮಿಸಲ್ಪಟ್ಟ ಸಂಪನ್ಮೂಲ ವ್ಯಕ್ತಿಗಳು(District resource person) ಅರ್ಜಿ ಹಾಗೂ ಯೋಜನಾ ವರದಿ(Detail project report) ಪರಿಶೀಲಿಸಿ ಜಿಲ್ಲಾ ಮಟ್ಟದ ಸಮಿತಿಗೆ ಸಲ್ಲಿಸುತ್ತಾರೆ. ಸಮಿತಿ ಅಧ್ಯಕ್ಷರು ಜಂಟಿ ಕೃಷಿ ನಿರ್ದೇಶಕ ರಾಗಿದ್ದು, ಸದರಿ ಅರ್ಜಿಗಳನ್ನು ಸಮಿತಿಯಲ್ಲಿಟ್ಟು ಅರ್ಹ ಫಲಾನುಭವಿಗಳ ಆಯ್ಕೆ ಮಾಡಿಕೊಂಡು, ಬ್ಯಾಂಕ್ಗಳಿಗೆ ಸಾಲ ಮಂಜೂರಾತಿಗಾಗಿ ಕಳುಹಿಸುತ್ತಾರೆ. ಸಂಸ್ಥೆಗಳ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಸಮಿತಿಯು ನೋಡಲ ಏಜೆನ್ಸಿಗೆ ವರ್ಗಾಯಿಸುತ್ತದೆ ಹಾಗೂ ಅರ್ಜಿದಾರರಿಗೆ ಮಾಹಿತಿ ನೀಡಲು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸಹಕರಿಸುತ್ತಾರೆ. ಒಂದು ವೇಳೆ ಅರ್ಜಿಗಳು ಸಂಸ್ಥೆಗಳಿಂದ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಮಟ್ಟದ ಸಮಿತಿ ವರದಿ ಸಲ್ಲಿಸುತ್ತದೆ.ರಾಜ್ಯ ಮಟ್ಟದ ಸಮಿತಿಗೆ ಸಲ್ಲಿಸುತ್ತದೆ. 15 ಲಕ್ಷಕ್ಕೂ ಹೆಚ್ಚು ಸಹಾಯಧನ ಬೇಕಾಗಿದ್ದಲ್ಲಿ ಸದರಿ ಅರ್ಜಿಗಳನ್ನು ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ಯಮಗಳ ಮಂತ್ರಾಲಯಕ್ಕೆ ಅನುಮೋದನೆಗಾಗಿ ಕಳುಹಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್(Aadhar card)
ಪ್ಯಾನ್ ಕಾರ್ಡ್(Pan card)
ಬ್ಯಾಂಕ್ ಪಾಸಬುಕ್(Bank passbook)

PMFME-ಕಿರು ಆಹಾರ ಉದ್ಯಮ ಸ್ಥಾಪನೆಗೆ 50% ಸಬ್ಸಿಡಿ,ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ಜಿಲ್ಲೆಗಳ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ (DRP contact number) ಸಂಪರ್ಕ ಸಂಖ್ಯೆ ತಿಳಿಯಲು ಈ ಕೆಳಗಿನ pdf download ಮಾಡಿಕೊಳ್ಳಿ
]]>
Fri, 07 Mar 2025 22:25:54 +0530 shivuagrico
Baddi manna&ಈ 2 ಬ್ಯಾಂಕ್ ಗಳಲ್ಲಿ ಸಾಲ ಮಾಡಿದವರಿಗೆ ಬಡ್ಡಿ ಮನ್ನಾ ಘೋಷಿಸಿದ ಸಿಎಂ ಸಿದ್ದರಾಮಯ್ಯ https://krushirushi.in/Baddi-manna-1926 https://krushirushi.in/Baddi-manna-1926 Baddi manna-ಈ 2 ಬ್ಯಾಂಕ್ ಗಳಲ್ಲಿ ಸಾಲ ಮಾಡಿದವರಿಗೆ ಬಡ್ಡಿ ಮನ್ನಾ ಘೋಷಿಸಿದ ಸಿಎಂ ಸಿದ್ದರಾಮಯ್ಯ

2025-26ರ ರಾಜ್ಯ ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ರೈತರಿಗೆ ಬಂಪರ್​ ಗಿಫ್ಟ್​​ ಕೊಟ್ಟಿದ್ದಾರೆ. ಕೃಷಿ ಇಲಾಖೆಗೆ ಹೆಚ್ಚಿನ ಮಹತ್ವ ನೀಡುವುದರ ಜೊತೆಗೆ ಈ ಎರಡು ಬ್ಯಾಂಕ್​ಗಳಲ್ಲಿ ರೈತರು ಸಾಲ ಮಾಡಿದ್ರೆ ಬಡ್ಡಿ ಮನ್ನಾ ಮಾಡಲಾಗಿದೆ.

2025-26ರ ದಾಖಲೆಯ ಬಂಜೆಟ್ (State Budget0​ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ರೈತರಿಗೆ ಬಂಪರ್​ ಗಿಫ್ಟ್​​ (Special Gift to Farmers) ಕೊಟ್ಟಿದ್ದಾರೆ. ಈ ಬಜೆಟ್​ನಲ್ಲಿ ಕೃಷಿ ಇಲಾಖೆಗೆ ಹೆಚ್ಚಿನ ಮಹತ್ವ ನೀಡಿರುವ ‘ರೈತ’ರಾಮಯ್ಯ ರೈತರ ಸಾಲದ (Loan) ಬಡ್ಡಿ ಮನ್ನಾ (Interest waived) ಮಾಡುವಂತೆ ಘೋಷಿಸಿದ್ದಾರೆ. ಈ ಎರಡು ಬ್ಯಾಂಕ್​ಗಳಲ್ಲಿ ರೈತರು ಸಾಲ ಮಾಡಿದ್ದರೆ, ಅವರ ಬಡ್ಡಿ ಮನ್ನಾ ಆಗಲಿದೆ.

ಡಿಸಿಸಿ (DCC), ಪಿಕಾರ್ಡ್ ಬ್ಯಾಂಕ್‌ಗಳಲ್ಲಿ (Picard Bank)   ಸಾಲ ಮಾಡಿರುವ ರೈತರು ಈಗ ಬಡ್ಡಿ ಕಟ್ಟುವ ಹಾಗಿಲ್ಲ. ಈ ಎರಡು ಬ್ಯಾಂಕ್​ಗಳಲ್ಲಿ ರೈತರ ಸಾಲದ ಬಡ್ಡಿ ಮನ್ನಾ ಮಾಡಲಾಗಿದೆ. 2 ಬ್ಯಾಂಕ್‌ಗಳಲ್ಲಿ ರೈತರ ಸಾಲದ ಬರೋಬ್ಬರಿ ₹240 ಕೋಟಿ ಬಡ್ಡಿ ಮನ್ನಾ ಮಾಡಲಾಗಿದೆ. ಜೊತೆಗೆ 37 ಲಕ್ಷ ರೈತರಿಗೆ ಸಾಲಕ್ಕಾಗಿ ₹28,000 ಕೋಟಿ ಘೋಷಿಸಲಾಗಿದೆ.

Bele sala baddi manna-ಈ ಯೋಜನೆಯಡಿ ಸಿಗಲಿದೆ ನಿಮ್ಮ ಸಾಲದ ಮೇಲೆ 3% ಬಡ್ಡಿ ಮನ್ನಾ,ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

 ಕೇಂದ್ರ ವಲಯದ ಯೋಜನೆ ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಸರ್ಕಾರವು ಹಣಕಾಸು ಸೌಲಭ್ಯಗಳನ್ನು ಒದಗಿಸುತ್ತಿದ್ದು, ರೂ. 2 ಕೋಟಿ ಸಾಲದ ಮೊತ್ತಕ್ಕೆ ವಾರ್ಷಿಕ ಶೇ. 3ರಂತೆ 7 ವರ್ಷದ ಅವಧಿಗೆ ಬಡ್ಡಿ ಸಹಾಯಧನ ಲಭ್ಯವಿರುತ್ತದೆ.


ಅರ್ಹ ಕೃಷಿ ಚಟುವಟಿಕೆಗಳು/ಯೋಜನೆಗಳು ಈ ಕೆಳಗಿನಂತಿವೆ

ಇ-ಮಾರುಕಟ್ಟೆ ವೇದಿಕೆ ಸೇರಿದಂತೆ ಸರಬರಾಜು ಸರಪಳಿ ಸೇವೆಗಳು ಗೋದಾಮುಗಳು ಮತ್ತು ಸೈಲೊಗಳು + ಪ್ಯಾಕ್ ಹೌಸ್‌ಗಳು ವಿಂಗಡಣೆ ಮತ್ತು ಶ್ರೇಣೀಕರಣ ಘಟಕಗಳು ಶೀತಲಗೃಹ ಸರಪಳಿಗಳು ಸಾಗಾಣಿಕೆ ಸೌಲಭ್ಯಗಳು ಪ್ರಾಥಮಿಕ ಸಂಸ್ಕರಣಾ ಕೇಂದ್ರಗಳು ಹಣ್ಣು ಮಾಗಿಸುವ ಘಟಕಗಳು

ಮೌಲ್ಯಮಾಪನ ಘಟಕಗಳು ಸಂಕುಚಿತ ಜೈವಿಕ ಅನಿಲ (CBG) ಸ್ಥಾವರ + ಸಾವಯವ ಪರಿಕರ ಉತ್ಪಾದನೆ + ಜೈವಿಕ ಉತ್ತೇಜಕ ಉತ್ಪಾದನಾ ಘಟಕಗಳು * ಸಸ್ಯ ನರ್ಸರಿ /ಅಂಗಾಂಶ ಕೃಷಿ ಬೀಜ ಸಂಸ್ಕರಣೆ + ಕೃಷಿ ಯಂತ್ರಧಾರೆ ಕೇಂದ್ರಗಳು ಸ್ಮಾರ್ಟ್ ಮತ್ತು ನಿಖರವಾದ ಕೃಷಿ ಸಂಯೋಜಿತ ಸ್ಪಿರುಲಿನಾ ಉತ್ಪಾದನೆ ಮತ್ತು ಸಂಸ್ಕರಣಾ ಘಟಕಗಳು ರೇಷ್ಮೆ ಕೃಷಿ ಸಂಸ್ಕರಣಾ ಘಟಕ • ಜೇನು ಸಂಸ್ಕರಣಾ ಘಟಕ ಪ್ಲಾಂಟ್ ಕ್ಯಾರಂಟೈನ್ ಘಟಕಗಳು ಮತ್ತು ಸಾಮೂಹಿಕ ಕೃಷಿ ಅಡಿ: ಜಲಕೃಷಿ, ವಾಯುಕೃಷಿ, ಹಸಿರುಮನೆ, ಬಹುಮಹಡಿ ಕೃಷಿ, ಅಣಬೆ ಬೇಸಾಯ

ಅರ್ಹ ಫಲಾನುಭವಿಗಳು

ರೈತರು/ ರೈತ ಉತ್ಪಾದಕ ಸಂಸ್ಥೆಗಳು, ಪ್ರಾಂತೀಯ ಸಹಕಾರ ಒಕ್ಕೂಟಗಳು ಕೃಷಿ ಉದ್ಯಮಿಗಳು / ನವೋದ್ಯಮಿಗಳು ಪ್ರಾಥಮಿಕ ಕೃಷಿ ಕ್ರೆಡಿಟ್ ಸಹಕಾರ ಸಂಘಗಳು + ವಿವಿಧೋದ್ದೇಶ ಸಹಕಾರ ಸಂಘಗಳು * ಸ್ವ-ಸಹಾಯ ಗುಂಪುಗಳು / ಜಂಟಿ ಬಾಧ್ಯತಾ ಗುಂಪುಗಳು / ಖಾಸಗಿ ಮಾಲೀಕತ್ವ ಸಂಸ್ಥೆಗಳು.
ಯೋಜನೆಯಲ್ಲಿ ಭಾಗವಹಿಸುವ ಹಣಕಾಸು ಸಂಸ್ಥೆಗಳು:
ರಾಷ್ಟ್ರೀಕೃತ ಬ್ಯಾಂಕುಗಳು + ಶೆಡ್ಯೂಲ್ಡ್ ಸಹಕಾರಿ ಬ್ಯಾಂಕ್ ಗಳು + ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ ಗಳು ಸಣ್ಣ ಹಣಕಾಸು ಬ್ಯಾಂಕುಗಳು + ಬ್ಯಾಂಕೇತರ ಹಣಕಾಸು ಸಂಸ್ಥೆಗಳು + ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (ಎನ್ ಸಿಡಿಸಿ).

ಅರ್ಜಿ ಸಲ್ಲಿಕೆ ಪ್ರಕ್ರಿಯೆ


ಮೊದಲು ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://agriinfra.dac.gov.in/Home/Login

ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ Beneficiary ಮೇಲೆ ಕ್ಲಿಕ್ ಮಾಡಿ
ನಂತರ Benefit under other scheme ಮೇಲೆ ಕ್ಲಿಕ್ ಮಾಡಿ

ನಂತರ ನೀವು ಅರ್ಜಿ ಸಲ್ಲಿಸಲು ಬಯಸುವ ಯೋಜನೆಯ ಮೇಲೆ ಕ್ಲಿಕ್ ಮಾಡಿ
ಉದಾಹರಣೆಗೆ ಈಗಾಗಲೇ ನೀವು PMFME ಯೋಜನೆಯ ಫಲಾನುಭವಿಗಳಾಗಿದ್ದು,ನಿಮ್ಮ ಸಾಲದ ಮೇಲೆ 3% ಬಡ್ಡಿ ಸಬ್ಸಿಡಿ ಪಡೆಯಬಹುದು

ನಂತರ ನಿಮ್ಮ ಹೆಸರು, ಮೊಬೈಲ್ ನಂಬರ್, ಆಧಾರ್ ನಂಬರ್ ಹಾಕಿ Send OTP ಮೇಲೆ ಕ್ಲಿಕ್ ಮಾಡಿ,ಮೊಬೈಲ್ ಗೆ ಬರುವ OTP ಹಾಕಿ Register ಮಾಡಿ

ನಿಮ್ಮ ಮೊಬೈಲ್ ಗೆ ID ಮತ್ತು password ಬರುತ್ತದೆ,ಅದನ್ನು ಹಾಕಿ ಲಾಗಿನ್ ಮಾಡಿ

ನಂತರ setting icon ಮೇಲೆ ಕ್ಲಿಕ್ ಮಾಡಿ Apply for interest subvention under other scheme ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಮಾಹಿತಿ ತುಂಬಿ,ನಿಮ್ಮ ಬ್ಯಾಂಕ್ ನ ಲೋನ್ Saction letter ಹಾಗೂ ಯೋಜನಾ ವರದಿಯನ್ನು ಅಪ್ಲೌಡ್ ಮಾಡಿ,Submit ಮೇಲೆ ಕ್ಲಿಕ್ ಮಾಡಿ


CPMU, ಕೃಷಿ ಮತ್ತು ರೈ ಕಲ್ಯಾಣ ಮಂತ್ರಾಲಯದ ಮೂಲಕ ಪರಿಶೀಲಿಸಲಾದ ಅರ್ಜಿಯನ್ನು ಬ್ಯಾಂಕ್‌ ಶಾಖೆಗೆ ಆನ್‌ ಲೈನ್‌ ನಲ್ಲಿ ವರ್ಗಾಯಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕೃಷಿ/ತೋಟಗಾರಿಕೆ ಇಲಾಖೆ, ಜಿಲ್ಲಾ ನಬಾರ್ಡ್‌ ವ್ಯವಸ್ಥಾಪಕರು, ನಿಮ್ಮ ವ್ಯಾಪ್ತಿಯ ಬ್ಯಾಂಕ್/‌ ಹಣಕಾಸು ಸಂಸ್ಥೆಗಳನ್ನು ಸಂಪರ್ಕಿಸಬಹುದು.

]]>
Fri, 07 Mar 2025 19:49:00 +0530 shivuagrico
Karnataka budget 2025&ರೈತರಿಗೆ ಸಿಹಿಸುದ್ದಿ ಕೊಟ್ಟ ಕರ್ನಾಟಕ ಬಜೇಟ್&2025 https://krushirushi.in/Karnataka-budget-2025 https://krushirushi.in/Karnataka-budget-2025 Karnataka budget 2025-ರೈತರಿಗೆ ಸಿಹಿಸುದ್ದಿ ಕೊಟ್ಟ ಕರ್ನಾಟಕ ಬಜೇಟ್-2025

2025-26ನೇ ಸಾಲಿನ ಬಜೆಟ್‌ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡಿದರು, ಹಾಗಾದ್ರೆ ಸಿಎಂ ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡಿದ ಇಂದಿನ ಬಜೆಟ್‌ನ ಹೈಲೆಟ್ಸ್‌ ಹೀಗಿದೆ.

ಕೃಷಿ
28. ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು, ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಪ್ರಸಕ್ತ ಸಾಲಿನಲ್ಲಿ, ಈ ಯೋಜನೆಯಡಿ 10 ಹವಾಮಾನ ವಲಯಗಳಲ್ಲಿ ಕೃಷಿ ಇಲಾಖೆಯ ಅಧೀನದ ಕ್ಷೇತ್ರಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳನ್ನು ಅಭಿವೃದ್ಧಿಪಡಿಸಿ, ಈ ಪದ್ಧತಿಯನ್ನು ಅಳವಡಿಸಿಕೊಳ್ಳಲು ರೈತರಿಗೆ ಪ್ರಚುರಪಡಿಸಲಾಗುವುದು.

29. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ. ಅನುದಾನ ಕಲ್ಪಿಸಲಾಗುವುದು.

30. ಕೃಷಿ ಬೆಳೆಗಳಲ್ಲಿ ನೀರನ್ನು ಸಮರ್ಥ ಬಳಕೆ ಮಾಡಿ, ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ. ಸಹಾಯಧನವನ್ನು ಒದಗಿಸಲಾಗುವುದು.


31. ತೊಗರಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಅಳವಡಿಕೆ,
ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸುವುದರ ಮೂಲಕ ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸಲು ಉದ್ದೇಶಿಸಿದೆ. ಈ ಮೂಲಕ ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು
88 ಕೋಟಿ ರೂ. ಒದಗಿಸಲಾಗುವುದು.


32. ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್‌ಕ್ಯೂಬೇಷನ್‌ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.
33. ಕೃಷಿ ಭಾಗ್ಯ ಯೋಜನೆಯಡಿ ಮೂರು ಲಕ್ಷಕ್ಕಿಂತ ಅಧಿಕ
ಕೃಷಿ ಹೊಂಡಗಳನ್ನು ನಿರ್ಮಿಸಿ ಮಳೆಯಾಶ್ರಿತ ಕೃಷಿ ಪ್ರದೇಶದ ಬೆಳೆಗಳಿಗೆ ರಕ್ಷಣಾತ್ಮಕ ನೀರಾವರಿ ಒದಗಿಸುವುದರೊಂದಿಗೆ ರೈತರ ಬೆಳೆಗಳ ಉತ್ಪಾದಕತೆ ಹಾಗೂ ಆದಾಯವನ್ನು ಹೆಚ್ಚಿಸಲಾಗಿದೆ.
ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 12,000
ಕೃಷಿ ಹೊಂಡಗಳನ್ನು ನಿರ್ಮಿಸಲಾಗುವುದು.


34. ಜಾಗತಿಕ ಮಟ್ಟದಲ್ಲಿ ಡಿಜಿಟಲ್‌, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರದಲ್ಲಿ ಆಗುತ್ತಿರುವ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ, ಡಿಜಿಟಲ್‌ ಕೃಷಿ ಸೇವೆಗಳ ಕೇಂದ್ರವನ್ನು ಸ್ಥಾಪಿಸಲಾಗುವುದು. ಈ ಕೇಂದ್ರವು ರೈತರಿಗೆ ಮತ್ತು ನೀತಿ ನಿರೂಪಕರಿಗೆ ಬೆಳೆಗಳ ಕುರಿತು ನಿಖರವಾದ ತೀರ್ಮಾನವನ್ನು ಕೈಗೊಂಡು ಬೆಳೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ.


35. ರಾಜ್ಯದಲ್ಲಿ ಚಾಲ್ತಿಯಿರುವ ಹವಾಮಾನ ವಲಯಗಳ ವರ್ಗೀಕರಣ ಬಹಳ ವರ್ಷಗಳ ಹಿಂದೆ ಗುರುತಿಸಲಾಗಿರುವುದರಿಂದ ಹಾಗೂ ಇತ್ತೀಚಿನ ವರ್ಷಗಳ ನೈಸರ್ಗಿಕ ವೈಪರೀತ್ಯಗಳ ಬದಲಾವಣೆಯಿಂದ ಹವಾಮಾನ ವಲಯಗಳನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿಯನ್ನು ರಚಿಸಲಾಗುವುದು.


36. ಕರ್ನಾಟಕ ರಾಜ್ಯದ ಸಾಗುವಳಿ ಪ್ರದೇಶದ ಶೇ.64ರಷ್ಟು ಪ್ರದೇಶವು ಮಳೆಯಾಶ್ರಿತ ಪ್ರದೇಶವಾಗಿದ್ದು, ಮಳೆಯಾಶ್ರಿತ ಕೃಷಿಯನ್ನು ಜೀವನಾಧಾರವಾಗಿಸಿ ಸುಸ್ಥಿರವನ್ನಾಗಿಸಲು ಹಾಗೂ ರೈತರ ಜೀವನೋಪಾಯವನ್ನು ಸುಧಾರಿಸಲು ʻಸಮಗ್ರ ಮಳೆಯಾಶ್ರಿತ ಕೃಷಿ ನೀತಿʼಯನ್ನು ಅನುಷ್ಠಾನಕ್ಕೆ ತರಲಾಗುವುದು.


37. ರೈತರಿಗೆ ಮಣ್ಣು ಪರೀಕ್ಷೆ ಹಾಗೂ ಅವರು ಬಳಸುವ ಪರಿಕರಗಳಾದ ರಸಗೊಬ್ಬರ, ಬಿತ್ತನೆ ಬೀಜ, ಸಸ್ಯ ಸಂರಕ್ಷಣಾ ಔಷಧಿ, ಜೈವಿಕ ಗೊಬ್ಬರ ಇತ್ಯಾದಿಗಳ ಗುಣಮಟ್ಟವನ್ನು ಪರೀಕ್ಷಿಸಲು ಇಲಾಖೆಯಡಿ ಇರುವ 58 ಪ್ರಯೋಗಾಲಯಗಳನ್ನು ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಬಲವರ್ಧನೆಗೊಳಿಸಲಾಗುವುದು.


38. ಸುಸ್ಥಿರ ಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸಿ, ರೈತರ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಸಾವಯವ ಪ್ರಮಾಣೀಕರಣ ವ್ಯವಸ್ಥೆ ಕಲ್ಪಿಸಲಾಗುವುದು.


39. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಟ್ಟಾರೆ 3,000 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆಯನ್ನು ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಜಾರಿಗೊಳಿಸಲಾಗುವುದು.


40. ಜೈವಿಕ ಕೃಷಿ ಪರಿಕರ ಸ್ಟಾರ್ಟ್‌-ಅಪ್‌ಗಳು (Agri Start-up) ಉತ್ಪಾದಿಸುವ ಜೈವಿಕ ಪರಿಕರಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸೂಕ್ತ ದರದಲ್ಲಿ ಮಾರಾಟ ಮಾಡಲು ಉತ್ತೇಜಿಸಲಾಗುವುದು.


41. ವಿಶ್ವ ಬ್ಯಾಂಕ್‌ ನೆರವಿನ ರಿವಾರ್ಡ್‌ ಯೋಜನೆಯಡಿ ಈವರೆಗೆ ಒಟ್ಟಾರೆ 12.90 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಭೂ-ಸಂಪನ್ಮೂಲ ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 11 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಭೂ-ಸಂಪನ್ಮೂಲ ಸಮೀಕ್ಷೆ ಆಧಾರದ ಮೇಲೆ ರೈತರು ಸೂಕ್ತವಾದ ಬೆಳೆಗಳನ್ನು ಬೆಳೆಯಲು, ಅಗತ್ಯವಿರುವ ರಾಸಾಯನಿಕ ಗೊಬ್ಬರ ಹಾಗೂ ಪೋಷಕಾಂಶಗಳನ್ನು ಬಳಸಿ ಬೆಳೆಗಳ ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹಿಸಲಾಗುವುದು.


42. ಮಂಡ್ಯ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಈಗಾಗಲೇ ಅನುಮೋದನೆ ನೀಡಿದ್ದು, ಮೂಲಸೌಕರ್ಯ ಕಲ್ಪಿಸಲು
೨೫ ಕೋಟಿ ರೂ. ಒದಗಿಸಿ, ಪ್ರಸಕ್ತ ಸಾಲಿನಲ್ಲಿ ತರಗತಿಗಳನ್ನು ಆರಂಭಿಸಲಾಗುವುದು.


43. ಬರ ಮತ್ತು ರೋಗ ನಿರೋಧಕ ಲಕ್ಷಣಗಳ ಸಂಶೋಧನೆ ಕೈಗೊಂಡು ಬೆಳೆಗಳ ಉತ್ತಮ ತಳಿ ಅಭಿವೃದ್ಧಿಪಡಿಸಲು ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್‌ (Phenotyping) ಸೌಲಭ್ಯ ಕಲ್ಪಿಸಲಾಗುವುದು.


44. ಸಾವಯವ ಉತ್ಪನ್ನಗಳು ಮತ್ತು ಸಿರಿಧಾನ್ಯಗಳ ಬೇಡಿಕೆ ಮತ್ತು ಪೂರೈಕೆಗಳ ಅಂತರವನ್ನು ಸರಿದೂಗಿಸಲು ಹಾಗೂ ರೈತರಿಗೆ ಸೂಕ್ತ ಮಾರುಕಟ್ಟೆಯನ್ನು ಕಲ್ಪಿಸುವ ಉದ್ದೇಶದಿಂದ 20 ಕೋಟಿ ರೂ. ಮೊತ್ತದಲ್ಲಿ ʻಸಾವಯವ ಮತ್ತು ಸಿರಿಧಾನ್ಯಗಳ ಹಬ್‌ʼ ಅನ್ನು ಸ್ಥಾಪಿಸಲಾಗುವುದು.


45. ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು.


46. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಹೊಸ ಕೃಷಿ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲಾಗುವುದು.

ತೋಟಗಾರಿಕೆ
47. ರೈತರಿಗೆ ಹೆಚ್ಚಿನ ಆದಾಯ ಒದಗಿಸುವಲ್ಲಿ ತೋಟಗಾರಿಕಾ ಬೆಳೆಗಳ ಕೊಡುಗೆ ಮಹತ್ವದ್ದಾಗಿದೆ. ಇತ್ತೀಚಿನ ಬೆಳೆ ಪದ್ಧತಿ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ ತಂತ್ರಜ್ಞಾನದಲ್ಲಾದ ಆಧುನೀಕರಣದ ಅನುಕೂಲವನ್ನು ಬೆಳೆಗಾರರಿಗೆ ತಲುಪಿಸುವ ಉದ್ದೇಶದಿಂದ ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಅನ್ನು ಜಾರಿಗೊಳಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ 95 ಕೋಟಿ ರೂ. ಅನುದಾನ ಒದಗಿಸಿದೆ.


48. ತೋಟಗಾರಿಕಾ ಬೆಳೆಗಳ ವಿಸ್ತೀರ್ಣ, ಉತ್ಪಾದನೆ, ಬೆಳೆಗಳ ಆರೋಗ್ಯ, ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ನೈಜ ಸಮಯದ (Real Time) ಆಧಾರದ ಮೇಲೆ ರೈತರಿಗೆ ಮಾಹಿತಿ ಒದಗಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ, ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಸ್ಪೇಸ್‌ ಸೈನ್ಸ್ ಟೆಕ್ನಾಲಜಿ ಮತ್ತು ಖಾಸಗಿ ಸಹಯೋಗದಲ್ಲಿ ಜ್ಞಾನ ಕೋಶ ಸ್ಥಾಪಿಸಲಾಗುವುದು.


49. ರಾಜ್ಯದ 20 GI ಟ್ಯಾಗ್‌ ಹೊಂದಿರುವ ಬೆಳೆಗಳು ಹಾಗೂ ಇತರೆ ದೇಸಿ ತಳಿಗಳು ಕಣ್ಮರೆಯಾಗಿ ನಶಿಸಿ ಹೋಗುವುದನ್ನು ತಪ್ಪಿಸಲು ದೇಶಿ ತಳಿಗಳ ಬೀಜ ಬ್ಯಾಂಕ್‌ ಸ್ಥಾಪಿಸಲಾಗುವುದು.
50. ಬ್ಯಾಡಗಿ ಮೆಣಸಿನಕಾಯಿ ತಳಿಯ ಸಂರಕ್ಷಣೆ ಮತ್ತು ಎಲೆ ಮುಟುರು ರೋಗ, ತ್ರಿಪ್ಸ್‌ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ಕೈಗೊಳ್ಳಲಾಗುವುದು.


51. ತೋಟಗಾರಿಕೆ ಇಲಾಖೆಯ ಅಧೀನದ ಆಯ್ದ ಕ್ಷೇತ್ರಗಳು ಮತ್ತು ನರ್ಸರಿಗಳಡಿ ಸಾರ್ವಜನಿಕ-ಖಾಸಗಿ ಸಹಯೋಗದೊಂದಿಗೆ
ಹೂ-ಕೃಷಿ, ಅಲಂಕಾರಿಕ ಸಸ್ಯಗಳು, ಔಷಧೀಯ ಸಸ್ಯಗಳನ್ನು ಬೆಳೆಸಲು ಹಾಗೂ ತೋಟಗಾರಿಕಾ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಾರ್ಯಕ್ರಮವನ್ನು ರೂಪಿಸಲಾಗುವುದು.


52. ಗದಗ ಜಿಲ್ಲೆಯ ಡಂಬಳದಲ್ಲಿ ತೋಟಗಾರಿಕಾ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲಾಗುವುದು.


53. ತೋಟಗಾರಿಕಾ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು 52,000 ಫಲಾನುಭವಿಗಳಿಗೆ 426 ಕೋಟಿ
ರೂ. ಸಹಾಯ ಧನವನ್ನು ಒದಗಿಸಲಾಗುವುದು.


54. ಮಲೆನಾಡು ಜಿಲ್ಲೆಗಳಲ್ಲಿ ಎಲೆ ಚುಕ್ಕೆ ರೋಗದ ಬಾಧೆಗೆ ತುತ್ತಾಗಿ 2 ಲಕ್ಷಕ್ಕಿಂತ ಅಧಿಕ ಅಡಿಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ.ಈ ರೋಗ ನಿಯಂತ್ರಿಸಲು ಸಸ್ಯ ಸಂರಕ್ಷಣಾ ಕ್ರಮಗಳಿಗಾಗಿ 62 ಕೋಟಿ ರೂ. ಒದಗಿಸಲಾಗಿದೆ.
55. ತೆಂಗು ಬೆಳೆಯುವ ಪ್ರದೇಶಗಳಲ್ಲಿ ಕಪ್ಪು ತಲೆ ಹುಳುವಿನ ಬಾಧೆಯ ಕುರಿತು ವೈಜ್ಞಾನಿಕ ಸಮೀಕ್ಷೆ ನಡೆಸಿ, ಇದರ ಆಧಾರದ ಮೇಲೆ ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಲಾಗುವುದು.


ರೇಷ್ಮೆ
56. ಅಂತಾರಾಷ್ಟ್ರೀಯ ದರ್ಜೆಯ ದ್ವಿತಳಿ ಕಚ್ಚಾ ರೇಷ್ಮೆಯ ದೇಶೀಯ ಬೇಡಿಕೆಯನ್ನು ಪೂರೈಸಲು ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್‌ ಘಟಕಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸಲಾಗುವುದು.


57. ರಾಮನಗರ ಮತ್ತು ಶಿಡ್ಲಘಟ್ಟ ಹೈ-ಟೆಕ್‌ ರೇಷ್ಮೆ ಗೂಡಿನ ಮಾರುಕಟ್ಟೆಯ ಮೊದಲನೇ ಹಂತದ ಕಾಮಗಾರಿಗಳು ಮುಕ್ತಾಯಗೊಳ್ಳಲಿದ್ದು, ಪ್ರಸಕ್ತ ಸಾಲಿನಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು 250 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.


58. ಮೈಸೂರು ಮತ್ತು ಸುತ್ತಮುತ್ತಲಿನ ಭಾಗದ ರೇಷ್ಮೆ
ಬೆಳೆಗಾರರಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ
ರೇಷ್ಮೆಗೂಡಿನ ಮಾರುಕಟ್ಟೆಯನ್ನು NABARD ಸಹಯೋಗದಲ್ಲಿ ಸ್ಥಾಪಿಸಲಾಗುವುದು.


59. ರೈತರು ಉತ್ಪಾದಿಸುವ ರೇಷ್ಮೆಗೂಡುಗಳಿಗೆ ಸೂಕ್ತ ಬೆಲೆ ದೊರಕಿಸಲು ಹಾಗೂ ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟವನ್ನು ಸಾಧಿಸುವ ದೃಷ್ಟಿಯಿಂದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗಳಲ್ಲಿ ಗುಣಮಟ್ಟ ಪರೀಕ್ಷೆ ಮತ್ತು ಶ್ರೇಣೀಕರಣದ ಕಾರ್ಯಕ್ಕಾಗಿ Assayer ಗಳನ್ನು ನಿಯೋಜಿಸಲಾಗುವುದು.


60. ರಾಜ್ಯದಲ್ಲಿ ರೇಷ್ಮೆ ಬೆಳೆ ವಿಸ್ತರಿಸಲು ರೇಷ್ಮೆ ಗೂಡಿನ ಪೂರ್ವ ಮತ್ತು ನಂತರದ ಚಟುವಟಿಕೆಗಳಿಗೆ ಪ್ರೋತ್ಸಾಹಿಸಲು ರೇಷ್ಮೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 55 ಕೋಟಿ ರೂ. ಅನುದಾನ ಒದಗಿಸಲಾಗುವುದು.

ಪಶುಸಂಗೋಪನೆ
61. ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ "ಅನುಗ್ರಹ" ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂ. ಗಳಿಂದ 15,000 ರೂ. ಗಳಿಗೆ; ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 5,000 ರೂ. ಗಳಿಂದ 7,500 ರೂ. ಗಳಿಗೆ ಹಾಗೂ 3-6 ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 3,500 ರೂ.ಗಳಿಂದ 5,000 ರೂ.ಗಳಿಗೆ ಹೆಚ್ಚಿಸಲಾಗುವುದು.


62. ಕಳೆದ ಎರಡು ವರ್ಷಗಳಲ್ಲಿ 60 ಹೊಸ ಪಶು ಚಿಕಿತ್ಸಾಲಯಗಳನ್ನು ಕಾರ್ಯಾರಂಭಗೊಳಿಸಲಾಗಿದ್ದು, 2025-26ನೇ ಸಾಲಿನಲ್ಲಿ 50 ನೂತನ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗುವುದು.


63. 2025-26ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳನ್ನು ನಬಾರ್ಡ್‌ ಸಹಯೋಗದೊಂದಿಗೆ ನಿರ್ಮಿಸಲಾಗುವುದು.


64. ಅಮೃತ್‌ ಮಹಲ್‌ ಕಾವಲುಗಳಲ್ಲಿನ ಭೂ ಒತ್ತುವರಿ ತಡೆಯಲು ಹಾಗೂ ಅಮೃತ್‌ ಮಹಲ್‌ ರಾಸುಗಳಿಗೆ ಮೇವು ಲಭ್ಯವಾಗುವಂತೆ ಮಾಡಲು, ಅರಣ್ಯ ಇಲಾಖೆ ಹಾಗೂ ನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿಗೊಳಿಸಲಾಗುವುದು.


65. ರಾಜ್ಯದ ಹೆಮ್ಮೆಯ ದೇಶಿ ದನದ ತಳಿಗಳಾದ ಹಳ್ಳಿಕಾರ್‌, ಕಿಲಾರಿ, ಅಮೃತ್‌ ಮಹಲ್‌ ಹಾಗೂ ಬಂಡೂರು ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸಲಾಗುವುದು.


66. ಆಧುನಿಕ ಕುರಿ ಸಾಕಾಣಿಕೆ ಪದ್ಧತಿಗಳು ಮತ್ತು ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಲಸೆ ಕುರಿಗಾರರಿಗೆ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ತರಬೇತಿ ನೀಡಲಾಗುವುದು.

67. ನಮ್ಮ ಸರ್ಕಾರವು ಅಸ್ತಿತ್ವಕ್ಕೆ ಬಂದ ನಂತರ "ನಂದಿನಿ" ಬ್ರ್ಯಾಂಡ್‌ನ ಮಾರುಕಟ್ಟೆಯನ್ನು ವಿಸ್ತರಿಸಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದೆ. 2024-25ನೇ ಸಾಲಿನಲ್ಲಿ ಪ್ರತಿ ಒಂದು ಕೋಟಿಗೂ ಹೆಚ್ಚು ಲೀಟರ್‌ ಹಾಲನ್ನು ಶೇಖರಿಸಲಾಗಿದೆ.

ಮೀನುಗಾರಿಕೆ
68. ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು.


69. ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜಿಗೆ ಪ್ರಸ್ತುತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲವನ್ನು ದ್ವಿಗುಣಗೊಳಿಸಲಾಗುವುದು.


70. ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್‌ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲು
30 ಕೋಟಿ ರೂ. ಒದಗಿಸಲಾಗುವುದು.


71. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು.


72. ರಾಜ್ಯದಲ್ಲಿ ನೋಂದಣಿಯಾಗಿರುವ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್‌ಗಳನ್ನು ಬದಲಾಯಿಸಿ, ಹೊಸ ಇಂಜಿನ್‌ ಖರೀದಿಸಲು ಶೇ.50 ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ ನೀಡಲಾಗುವುದು.


73. ಪ್ರವಾಸಿಗರಿಗೆ ಶುಚಿ-ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈ-ಟೆಕ್‌ ಮತ್ಸ್ಯದರ್ಶಿನಿಯನ್ನು ಪ್ರಾರಂಭಿಸಲಾಗುವುದು.


74. ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಹನ ದಟ್ಟಣೆಯನ್ನು ನಿರ್ವಹಿಸಲು "ಮಲ್ಟಿ-ಲೆವೆಲ್‌ ಪಾರ್ಕಿಂಗ್‌" ವ್ಯವಸ್ಥೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು. 

75. ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರಸ್ತುತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲು ಕ್ರಮವಹಿಸಲಾಗುವುದು.


ಸಹಕಾರ
76. 2024-25ನೇ ಸಾಲಿನಲ್ಲಿ 21.78 ಲಕ್ಷ ರೈತರಿಗೆ 18,960 ಕೋಟಿ ರೂ. ಕೃಷಿ ಸಾಲ ವಿತರಿಸಲಾಗಿದೆ. ರಿಯಾಯತಿ ಬಡ್ಡಿ ದರದಲ್ಲಿ ನೀಡುವ ಪುನರ್ಧನದ ಮಿತಿಯನ್ನು ನಬಾರ್ಡ್‌ ಶೇ.58ರಷ್ಟು ಕಡಿಮೆ ಮಾಡಿದ್ದರೂ ಸಹ, ನಿಗದಿತ ಗುರಿಯನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ. ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲವನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ.


77. 2023-24ನೇ ಸಾಲಿನ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದಂತೆ, ಡಿಸಿಸಿ (DCC) ಹಾಗೂ ಪಿಕಾರ್ಡ್‌ (PCARD) ಬ್ಯಾಂಕುಗಳಿಗೆ ಸಂಬಂಧಿಸಿದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ 240 ಕೋಟಿ ರೂ. ಬಡ್ಡಿಯನ್ನು ಮನ್ನಾ ಮಾಡಲಾಗಿದೆ.


78. ಯಶಸ್ವಿನಿ ಯೋಜನೆಯಡಿ ಇಲ್ಲಿಯವರೆಗೆ 700 ನೆಟ್‌ವರ್ಕ್ ಆಸ್ಪತ್ರೆಗಳು ನೋಂದಣಿಯಾಗಿದ್ದು, ಈ ಆಸ್ಪತ್ರೆಗಳಲ್ಲಿ ಇದುವರೆಗೂ ರಾಜ್ಯಾದ್ಯಂತ 59,000 ಫಲಾನುಭವಿಗಳು 103 ಕೋಟಿ ರೂ. ಮೊತ್ತದ ಚಿಕಿತ್ಸೆ ಪಡೆದಿರುತ್ತಾರೆ.


79. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಕೇಂದ್ರ ಪುರಸ್ಕೃತ ಗಣಕೀಕರಣ ಯೋಜನೆಯಡಿ 93 ಕೋಟಿ ರೂ.ಗಳಷ್ಟು ಬಿಡುಗಡೆ ಮಾಡಿ, ರಾಜ್ಯದಲ್ಲಿ 110 ಸಂಘಗಳ ಗಣಕೀಕರಣವನ್ನು ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ, 3,000 ಸಂಘಗಳನ್ನು ಸಂಪೂರ್ಣವಾಗಿ ಗಣಕೀಕರಣಗೊಳಿಸಲು ಉದ್ದೇಶಿಸಲಾಗಿದೆ.


80. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಪ್ರತಿ ಕ್ವಿಂಟಾಲ್‌ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ ಪ್ರೋತ್ಸಾಹಧನ 450 ರೂ.ಗಳಂತೆ ಒಟ್ಟು 138 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ. ಇದರಿಂದ, ತೊಗರಿ ಬೆಳೆಯುವ ಪ್ರಮುಖ ಜಿಲ್ಲೆಗಳಾದ ಕಲಬುರಗಿ, ಬೀದರ್‌, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕೋಲಾರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಭಾಗದ ರೈತರಿಗೆ ಅನುಕೂಲವಾಗಲಿದೆ.


81. ಸಹಕಾರ ಇಲಾಖೆಯಲ್ಲಿ ಕಾರ್ಯಕ್ಷಮತೆ, ಪಾರದರ್ಶಕತೆ ಹಾಗೂ ಜನಸ್ನೇಹಿ ಸೇವೆಗಳನ್ನು ನೀಡಲು ಈ ಕೆಳಕಂಡ ಸುಧಾರಣಾ ಕ್ರಮಗಳನ್ನು ಜಾರಿಗೆ ತರಲಾಗುವುದು:
i) ರಾಜ್ಯದ ಎಲ್ಲಾ ನೊಂದಾಯಿತ ಗೃಹ ನಿರ್ಮಾಣ ಸಹಕಾರ ಸಂಘಗಳ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳದ ವತಿಯಿಂದ ಆನ್‌ಲೈನ್‌ನಲ್ಲಿ ಅಳವಡಿಸಲಾಗುವುದು.
ii) ಠೇವಣಿದಾರರ ಹಿತಾಸಕ್ತಿಯನ್ನು ಕಾಪಾಡಲು ಹಾಗೂ ಅವ್ಯವಹಾರವನ್ನು ತಡೆಯಲು ಸಹಾಯವಾಣಿಯನ್ನು ಪ್ರಾರಂಭಿಸಲಾಗುವುದು.
iii) ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ವರದಿಗಳನ್ನು ಡಿಜಿಟಲೀಕರಣಗೊಳಿಸಲಾಗುವುದು.
82. ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಪೂರ್ಣಗೊಂಡಿರುವ ಉಗ್ರಾಣಗಳ ನಿರ್ಮಾಣ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಲು 376 ಕೋಟಿ ರೂ. ಸಹಾಯಾನುದಾನವನ್ನು ಹಿಂದಿನ ಆಯವ್ಯಯದಲ್ಲಿ ಘೋಷಿಸಿದ್ದೇನೆ. ಅದರಂತೆ, ಈಗಾಗಲೇ 329 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ, ಬಾಕಿ ಇರುವ
47 ಕೋಟಿ ರೂ. ಮೊತ್ತವನ್ನು ಒದಗಿಸಲಾಗುವುದು.
83. ರಾಜ್ಯದ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಪರವಾನಿಗೆ ಪಡೆದು ಕಾರ್ಯನಿರ್ವಹಿಸುತ್ತಿರುವ ಶ್ರಮಿಕರು ಮೃತರಾದಾಗ ಅವರ ವಾರಸುದಾರರಿಗೆ ಒಂದು ಲಕ್ಷ ರೂ. ವಿಮಾ ಮೊತ್ತವನ್ನು ನೀಡಲಾಗುತ್ತಿದ್ದು, ಸದರಿ ವಿಮಾ ಮೊತ್ತವನ್ನು ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು.


84. ಬೆಂಗಳೂರಿನಲ್ಲಿರುವ ಮಾರುಕಟ್ಟೆ ಸಮಿತಿಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುವುದರಿಂದ ಬೆಂಗಳೂರಿನ ಹೊರವಲಯದಲ್ಲಿ ಹೊಸ Satellite Market ಅನ್ನು ಸ್ಥಾಪಿಸಲಾಗುವುದು.
85. ಕೊಪ್ಪಳ ಜಿಲ್ಲೆಯ ಬೂದುಗುಂಪ ಗ್ರಾಮದಲ್ಲಿ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು KKRDB ವತಿಯಿಂದ 25 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಲಭ್ಯಗಳೊಂದಿಗೆ ಸ್ಥಾಪಿಸಲಾಗುವುದು.


86. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆಯನ್ನು ಉತ್ತೇಜಿಸಲು 10 ಕೋಟಿ ರೂ. ಅನುದಾನವನ್ನು ಪ್ರಥಮ ಹಂತದಲ್ಲಿ ನೀಡಲಾಗುವುದು. ಕಲಬುರಗಿಯಲ್ಲಿ ನೂತನ ಮೆಗಾ ಡೈರಿಯನ್ನು ಪ್ರಾರಂಭಿಸಲು KKRDB ವತಿಯಿಂದ 50 ಕೋಟಿ ರೂ. ಅನುದಾನ ಒದಗಿಸಲಾಗುವುದು.


87. KKRDB ವತಿಯಿಂದ ಕಲಬುರಗಿಯಲ್ಲಿ ಪ್ರಾದೇಶಿಕ ಸಹಕಾರ ಭವನವನ್ನು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದೆ.


88. KKRDB ಸಹಯೋಗದಿಂದ ಗ್ರಾಮೀಣ ಉಗ್ರಾಣಗಳನ್ನು
60 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.
89. ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಅನುವಾಗುವಂತೆ ಬೆಂಗಳೂರಿನಲ್ಲಿ ಸುಸಜ್ಜಿತ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು ಪ್ರಾರಂಭಿಸಲಾಗುವುದು.


90. ಚಿಕ್ಕಬಳ್ಳಾಪುರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಹೈಟೆಕ್‌ ಹೂವಿನ ಮಾರುಕಟ್ಟೆಯನ್ನು ಹಾಗೂ ಕೆ.ಜಿ.ಎಫ್‌. ನಲ್ಲಿ ರೈತರ ಆಧುನಿಕ ಮಾರುಕಟ್ಟೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.

Karnataka budget 2025 live link https://content.jwplatform.com/previews/qS7YCgZU

]]>
Fri, 07 Mar 2025 10:03:55 +0530 shivuagrico
Bele vime&ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Bele-vime-1922 https://krushirushi.in/Bele-vime-1922 Bele vime-ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Thu, 06 Mar 2025 20:57:08 +0530 shivuagrico
Arecanut bele parihara&ಅಡಿಕೆ ಬೆಳೆಗಾರರಿಗೆ 104 ಕೋಟಿ ಬೆಳೆಪರಿಹಾರ, ಯಾರಿಗೆ ಎಷ್ಟು ಪರಿಹಾರ ಜಮಾ ಆಗಲಿದೆ https://krushirushi.in/Arecanut-bele-parihara-1921 https://krushirushi.in/Arecanut-bele-parihara-1921 Arecanut bele parihara-ಅಡಿಕೆ ಬೆಳೆಗಾರರಿಗೆ 104 ಕೋಟಿ ಬೆಳೆಪರಿಹಾರ, ಯಾರಿಗೆ ಎಷ್ಟು ಪರಿಹಾರ ಜಮಾ ಆಗಲಿದೆ


ಎಲೆ ಚುಕ್ಕೆ ರೋಗ ಹಾಗೂ ಹಳದಿ ಎಲೆ ರೋಗಗಳಿಂದ ತೊಂದರೆಗೆ ಒಳಗಾದ ರೈತರಿಗೆ ಅದಷ್ಟು ಶೀಘ್ರವಾಗಿ ಪರಿಹಾರ ಧನ ಬಿಡುಗಡೆ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದರು.

ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನಲ್ಲಿ ರೈತರಿಗೆ ಪ್ರತಿ ಹೆಕ್ಟೇರ್‌ಗೆ ರೂ.

4000/- ಗಳಂತೆ 1.5 ಹೆಕ್ಟೇರ್ ವರೆಗೆ ಪ್ರತಿ ಫಲಾನುಭವಿಗೆ ಗರಿಷ್ಠ ರೂ. 6000/- ಮೊತ್ತದ ಸಸ್ಯ ಸಂರಕ್ಷಣಾ ಔಷಧಿಗಳನ್ನು 6,250 ಹೆಕ್ಟೇರ್ ಪ್ರದೇಶಕ್ಕೆ ವಿತರಿಸಿ ರೂ. 2.50 ಕೋಟಿ ಅನುದಾನವನ್ನು 12,300 ಅಡಿಕೆ ಬೆಳೆಗಾರರಿಗೆ ನೀಡಲಾಗಿರುತ್ತದೆ ಎಂದು ತಿಳಿಸಿದರು.

ಅಡಿಕೆ ಬೆಳೆಗಾರರಿಗೆ ಅಡಿಕೆ ಬೆಳೆಯ ಕಟಾವು ಹಾಗೂ (ದೋಟಿ) ಖರೀದಿಸಲು ಕೃಷಿ ಯಾಂತ್ರೀಕರಣ ಯೋಜನೆಯಡಿ ಸಾಮಾನ್ಯ ವರ್ಗದವರಿಗೆ ಶೇ. 40 ರಷ್ಟು ಹಾಗೂ ಪರಿಶಿಷ್ಟ ಜಾತಿ / ಪಂಗಡದವರಿಗೆ ಶೇ.50 ರಂತೆ ಸಹಾಯಧನ ನೀಡಲಾಗುತ್ತಿದೆ. 2023-24ನೇ ಸಾಲಿನಲ್ಲಿ 1,201 ಫಲಾನುಭವಿಗಳಿಗೆ ರೂ.3.66 ಕೋಟಿ ಸಹಾಯಧನ ನೀಡಲಾಗಿದೆ. ಅಡಿಕೆ ಎಲೆ ಚುಕ್ಕೆ ರೋಗದ ನಿಯಂತ್ರಣ ಕುರಿತು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ತಜ್ಞರ ಸಹಯೋಗದೊಂದಿಗೆ ತರಬೇತಿ ಕಾರ್ಯಗಾರಗಳು ಹಾಗೂ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸುವುದರ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

Bele parihara-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Thu, 06 Mar 2025 14:48:14 +0530 shivuagrico
ನಿಮ್ಮ ಜಮೀನಿಗೆ ಹೊಗಲು ಯಾರಾದರೂ ದಾರಿ ಬಿಡದಿದ್ದರೆ ಹೀಗೆ ಮಾಡಿ,ನಿಮ್ಮ ಗ್ರಾಮದ ಕಾಲು ದಾರಿ,ಬಂಡಿ ಜಾಡು ಇರುವ ಗ್ರಾಮನಕ್ಷೆ ಡೌನ್ಲೋಡ್ ಮಾಡಿಕೊಳ್ಳಿ&Village map https://krushirushi.in/Village-map-1920 https://krushirushi.in/Village-map-1920 Village map-ಕಾಲುದಾರಿ,ಬಂಡಿ ಜಾಡು ಕೂಡ ರಸ್ತೆಗಳೇ,ಯಾರೂ ಕೂಡ ತಡೆಯುವ ಹಾಗಿಲ್ಲ-ಹೈಕೊರ್ಟ್ ಮಹತ್ವದ ಆದೇಶ,ನಿಮ್ಮ ಗ್ರಾಮದ ಕಾಲು ದಾರಿ,ಬಂಡಿ ಜಾಡು ಇರುವ ಗ್ರಾಮನಕ್ಷೆ ಡೌನ್ಲೋಡ್ ಮಾಡಿಕೊಳ್ಳಿ

ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ರಸ್ತೆ ಸಂಪರ್ಕ ಒದಗಿಸುವುದು ನಮ್ಮ ಗುರಿಯಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರ ವಿನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಕುರಿತು ವಿಧಾನಸಭೆಯಲ್ಲಿ ಮಾಹಿತಿ ನೀಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 

'ನಮ್ಮ ಗ್ರಾಮ, ನಮ್ಮ ಹೊಲ' ಯೋಜನೆ ಸ್ಥಗಿತವಾಗಿರುವುದರಿಂದ ರೈತರು ಹೊಲಕ್ಕೆ ಹೋಗುವ ದಾರಿಗಳಿಗೆ ಅವಕಾಶ ಕಲ್ಪಿಸುವ ನೀತಿಯನ್ನು ಹೊಸ ರೂಪದಲ್ಲಿ ತರುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇನೆ.

ರಸ್ತೆಗಳು ಎಂಬ ಪರಿಕಲ್ಪನೆಯಲ್ಲಿ ಕಾಲುದಾರಿ(Kalu Dari),
ಬಂಡಿ ಜಾಡು(Bandi jadu)ಕೂಡಾ ಒಳಗೊಂಡಿರುತ್ತವೆ' ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಭೂಸ್ವಾಧೀನ ಕಾಯ್ದೆಯಡಿ ಜಮೀಣು ಸ್ವಾಧೀನಪಡಿಸಿಕೊಂಡ ಮಾತ್ರಕ್ಕೆ 'ಬಿ ಖರಾಬ್' ಭೂಮಿಯಲ್ಲಿ ಸಾರ್ವಜನಿಕರ ಹಕ್ಕನ್ನು ರದ್ದುಪಡಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

'ಕರ್ನಾಟಕ ಭೂ ಕಂದಾಯ ಕಾಯ್ದೆ-1964ರ ಕಲಂ 67ರ ಪ್ರಕಾರ ಎಲ್ಲಾ ಸಾರ್ವಜನಿಕ ರಸ್ತೆಗಳು, ಬೀದಿಗಳು, ಓಣಿಗಳು, ಪಥಗಳು, ಸೇತುವೆಗಳು, ಕಂದಕಗಳು, ತಡೆಗೋಡೆಗಳು ಮತ್ತು ಬೇಲಿಗಳು ಸರ್ಕಾರಕ್ಕೆ ಸೇರಿವೆ ಎಂದು ಸೂಚಿಸುತ್ತದೆ. ಕಾಲುದಾರಿ(Klaudari) ಅಥವಾ ಬಂಡಿ ಜಾಡು (Bandi jadu)ಎಂಬ ಗಾಡಿ ಜಾಡು ಈ ಹಿಂದೆ ಕರೆಯಲಾಗುತ್ತಿದ್ದ ರಸ್ತೆಗಳೆನಿಸಿವೆ' ಎಂದು ನ್ಯಾಯಪೀಠ ಹೇಳಿದೆ.


'ಕಾಲುದಾರಿ, ಬಂಡಿ ಜಾಡು ಸ್ಥಳವನ್ನು ಗ್ರಾಮದ ನಕ್ಷೆಯಲ್ಲಿ(Village map) ಮತ್ತು ಸಂಬಂಧಿತ ಕಂದಾಯ ದಾಖಲೆಗಳಲ್ಲಿ ಗುರುತಿಸಲಾಗಿದೆ. ಭೂಮಾಲೀಕರಿಗೆ ಸಂಬಂಧಿಸಿದಂತೆ ಈ ಭಾಗವನ್ನು 'ಬಿ ಖರಾಬ್' ಎಂದು ವರ್ಗೀಕರಿಸಲಾಗಿದೆ. ಈ ಜಮೀನುಗಳು ಸರ್ಕಾರಕ್ಕೆ ಸೇರಿದ್ದರೂ, ಸಾರ್ವಜನಿಕರ ಹಕ್ಕನ್ನೂ ನೀಡಲಾಗಿರುತ್ತದೆ' ಎಂದು ನ್ಯಾಯಪೀಠ ತಿಳಿಸಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆಯ ಕಲಂ 68ರ ಪ್ರಕಾರ 'ಬಿ
ಖರಾಬ್'ನಲ್ಲಿ ಸಾರ್ವಜನಿಕರ ಹಕ್ಕನ್ನು ಕಸಿದುಕೊಳ್ಳಲಾಗಿಲ್ಲ. ಈ ಸ್ಥಳದ ಮತ್ತು ಸುತ್ತಮುತ್ತಲಿನ ಎಲ್ಲಾ ಗ್ರಾಮಸ್ಥರು ಅಥವಾ ಸಾರ್ವಜನಿಕರು ಕಾಲುದಾರಿ ಬಳಸಲು ಅರ್ಹರಾಗಿರುತ್ತಾರೆ. ಹಾಗಾಗಿ, ಅರ್ಜಿದಾರರು ಈ ಭೂಮಿಯನ್ನು ಮೀಸಲಿಡಬೇಕಾಗಿತ್ತು ಮತ್ತು ಅದನ್ನು ಮಾರುಕಟ್ಟೆ ಪ್ರಾಂಗಣದ ಉದ್ದೇಶಗಳಿಗಾಗಿ ಬಳಸಬಾರದು' ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.

ರೈತರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯಿಲ್ಲದೆ ಸಾಕಷ್ಟು ಕಷ್ಟ ಪಡುತ್ತಿರುತ್ತಾರೆ. ಜಮೀನು ಹತ್ತಿರವೇ ಇರುತ್ತದೆ. ಆದರೆ ಎತ್ತಿನ ಬಂಡಿ ಹೋಗುವ ದಾರಿಯಿಲ್ಲದೆ ಬಹಳಷ್ಟು ತೊಂದರೆ ಅನುಭವಿಸುತ್ತಿರುತ್ತಾರೆ. ಅದಲ್ಲದೆ ಆದರೆ ಕೆಲವರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯೇ ಇಲ್ಲ.

ಅಕ್ಕಪಕ್ಕದ ಜಮೀನುಗಳಿಗೆ ದಾರಿ ಮಾಡಿಕೊಡದೆ ತೊಂದರೆ ಕೊಡುತ್ತಾರೆ.ಆದರೆ ಸರ್ಕಾರ ಈ ಕುರಿತು ಹೊಸ ನಿಯಮಾವಳಿಗಳನ್ನು ಹೊರಡಿಸಿದೆ. ನೀವು ಭೂಮಿಯನ್ನು ಹೊಂದಿರುವಾಗ ಜಮೀನಿನಲ್ಲಿ ಕೃಷಿ ಕಾರ್ಯಾಚರಣೆಗಳು ಎಷ್ಟು ಮುಖ್ಯವೋ, ಕ್ಷೇತ್ರಕ್ಕೆ ಪ್ರವೇಶವನ್ನು ಖಚಿತಪಡಿಸಿಕೊಳ್ಳುವುದು ಅಷ್ಟೇ ಮುಖ್ಯ.

ರೈತರು ತಮ್ಮ ಕೃಷಿ ಪರಿಕರಗಳನ್ನು ಜಮೀನಿಗೆ ಒಯ್ಯಬೇಕು. ಆದರೆ ಸರಿಯಾದ ದಾರಿ ಇಲ್ಲದಿದ್ದರೆ ಸಾಧ್ಯವಿಲ್ಲ. ಅಕ್ಕಪಕ್ಕದ ರೈತರನ್ನು ದಾರಿ ಕೇಳಿದರೆ ಅವರು ನಿರಾಕರಿಸುತ್ತಾರೆ. ತೊಂದರೆ ಕೊಡಲು ಪ್ರಯತ್ನಿಸುತ್ತಾರೆ. ಇಂತಹ ಸಮಯದಲ್ಲಿ ನೀವು ಕಾನೂನಿನ ಆಶ್ರಯವನ್ನು ತೆಗೆದುಕೊಳ್ಳಬಹುದು. ಈ ಕಾಯಿದೆಯ ಮೂಲಕ ನಿಮ್ಮ ಭೂಮಿಗೆ ಪ್ರವೇಶವನ್ನು ಮಾಡಬಹುದು. ಜಮೀನಿನ ದಾರಿಯ ಬಗ್ಗೆ ಕಾನೂನು ವ್ಯವಸ್ಥೆಯಲ್ಲಿ ಕಾನೂನುಗಳಿವೆ.

ಸರಾಗಗೊಳಿಸುವ ಕಾಯಿದೆಯು ಅವಶ್ಯಕತೆಯ ಸುಲಭತೆಯನ್ನು ಸೂಚಿಸುತ್ತದೆ. ಕಾನೂನಿನ ನಿಯಮದ ಪ್ರಕಾರ.. ಯಾವುದೇ ಕ್ಷೇತ್ರವು ಮತ್ತೊಂದು ಕ್ಷೇತ್ರದ ಮುಂದೆ ಇರುವಾಗ ಹಿಂಬದಿ ಕ್ಷೇತ್ರಕ್ಕೆ ಬಿಟ್ಟುಕೊಡಬೇಕು ಇಲ್ಲದಿದ್ದರೆ ಪ್ರಕರಣ ದಾಖಲಿಸಬಹುದು. ಸರಾಗ ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕಾದ ಇನ್ನೊಂದು ಮುಖ್ಯ ವಿಷಯವೆಂದರೆ ಈ ಹಿಂದೆ ಆ ಜಮೀನಿಗೆ ರಸ್ತೆ ಇದ್ದು, ಈಗ ಅದು ಮುಚ್ಚಿದ್ದರೆ ನೀವು ಅದರ ಬಗ್ಗೆ ಕೇಸ್‌ ದಾಖಲಿಸಬಹುದು. ಬೇರೆ ಜಮೀನಿಗೆ ಹೋಗಬೇಕಾದರೆ ದಾರಿ ಬಿಡಬೇಕು. ಇಲ್ಲದಿದ್ದರೆ ನೊಂದ ರೈತರು ಪ್ರಕರಣ ದಾಖಲಿಸಬಹುದು. ಟೆನೆನ್ಸಿ ಆಕ್ಟ್‌ನ ಸೆಕ್ಷನ್ 251 ನಿಮ್ಮ ಫಾರ್ಮ್‌ಗೆ ಹೋಗುವ ಹೊಸ ರಸ್ತೆಯನ್ನು ನಿರ್ಮಿಸಲು ನಿಮಗೆ ಅನುಮತಿಸುತ್ತದೆ.

Village map-ನಿಮ್ಮ ಊರಿನ ಕಾಲುದಾರಿ,ಬಂಡಿದಾರಿ ತಿಳಿಯುವ ಡೈರೆಕ್ಟ್ ಲಿಂಕ್

https://landrecords.karnataka.gov.in/indexkn.aspx 

ನಂತರ ಕಂದಾಯ ನಕ್ಷೆಗಳು ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೋಬಳಿ,ಗ್ರಾಮ select ಮಾಡಿ, search ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ ಗ್ರಾಮದ ಹೆಸರು ಕಾಣೆಸುತ್ತದೆ. ಆಗ ನಿಮ್ಮ ಗ್ರಾಮದ ಮುಂದಿರುವ pdf file ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದ ನಕ್ಷೆ ಕಾಣೆಸುತ್ತದೆ. ಅದರಲ್ಲಿ ಕಾಲುದಾರಿ,ಬಂಡಿದಾರಿ,ಕೆರೆ ಕಟ್ಟೆಯನ್ನು ನೋಡಬಹುದು.

]]>
Thu, 06 Mar 2025 07:34:36 +0530 shivuagrico
Pmkisan 20th instalment&ಈ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ ಪಿಎಂ ಕಿಸಾನ್ 20ನೇ ಕಂತು https://krushirushi.in/Pmkisan-20th-instalment-1919 https://krushirushi.in/Pmkisan-20th-instalment-1919 Pmkisan 20th instalment-ಈ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ ಪಿಎಂ ಕಿಸಾನ್ 20ನೇ ಕಂತು

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬ‌ರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 20ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 20th instalment date

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Thu, 06 Mar 2025 06:15:49 +0530 shivuagrico
Bhagyalakshmi yojane&ಭಾಗ್ಯಲಕ್ಷ್ಮಿ ಯೋಜನೆಯಡಿ 18 ವರ್ಷ ತುಂಬಿದ ಹೆಣ್ಣು ಮಕ್ಕಳ ಖಾತೆಗೆ 1 ಲಕ್ಷ ಹಣ ಜಮಾ ಪ್ರಾರಂಭ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ https://krushirushi.in/Bhagyalakshmi-yojane-1918 https://krushirushi.in/Bhagyalakshmi-yojane-1918 Bhagyalakshmi yojane-ಭಾಗ್ಯಲಕ್ಷ್ಮಿ ಯೋಜನೆಯಡಿ 18 ವರ್ಷ ತುಂಬಿದ ಹೆಣ್ಣು ಮಕ್ಕಳ ಖಾತೆಗೆ 1 ಲಕ್ಷ ಹಣ ಜಮಾ ಪ್ರಾರಂಭ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

http://blakshmi.kar.nic.in:8080/First.jsp

ನಂತರ "Home" ಪಕ್ಕದಲ್ಲಿರುವ "Quick search" ಮೇಲೆ ಕ್ಲಿಕ್ ಮಾಡಿ 

ನಂತರ "Quick search" ಕೆಳಗಿರುವ "Multi search" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು Select ಮಾಡಿ

ನಂತರ ನಿಮ್ಮ ಹೆಣ್ಣು ಮಗುವಿನ ಹೆಸರು,ಜನ್ಮ ದಿನಾಂಕ ಹಾಗೂ ಭಾಗ್ಯಲಕ್ಷ್ಮಿ ಬಾಂಡ್ ನಲ್ಲಿರುವ ಮಗುವಿನ id numbe ಹಾಕಿ,captch code ಹಾಕಿ search ಮೇಲೆ ಕ್ಲಿಕ್ ಮಾಡಿದರೆ, ಪಟ್ಟಿ ದೊರೆಯಲಿದೆ

ಫಲಾನುಭವಿಗಳು ಚಾಲ್ತಿಯಲ್ಲಿನ ಬ್ಯಾಂಕ್‌ ಖಾತೆ ಸಂಖ್ಯೆ, ಐಎಸ್‌ಎಫ್‌ಸಿ ಕೋಡ್‌, ಆಧಾರ್‌ ಕಾರ್ಡ್‌ ಸಂಖ್ಯೆ, ಯೋಜನೆಯ ಒರಿಜಿನಲ್‌ ಬಾಂಡ್‌, ಮಗುವಿನ ಜನನ ಪ್ರಮಾಣ ಪತ್ರ, ತಂದೆ, ತಾಯಿ, ಮಗುವಿನ ಹೆಸರು ಬದಲಾವಣೆಯಾಗಿದ್ದರೆ ಸಂಬಂಧಿಸಿದ ಸಿಡಿಪಿಒ ಅವರಿಂದ ದೃಢೀಕರಣ ಪತ್ರ, ಬಾಂಡ್‌ ಕಳೆದಿದ್ದರೆ ಬಾಂಡ್‌ ನಕಲು ಪ್ರತಿ ಜತೆ ಎಫ್‌ಐಆರ್‌ ಪ್ರತಿ, ದತ್ತು ಮಕ್ಕಳಾಗಿದ್ದಲ್ಲಿಕಾನೂನಾತ್ಮಕವಾಗಿ ದತ್ತು ಪಡೆದ ಪೋಷಕರ ಹೆಸರನ್ನು ಸಿಡಿಪಿಒ ದೃಢೀಕರಿಸಬೇಕು. ತಾಲೂಕು ಕೋಡ್‌ ಬದಲಾವಣೆ ಇದ್ದಲ್ಲಿ ಸಿಡಿಪಿಒ ದೃಢೀಕರಿಸಿದ ನಂತರವೇ ಪರಿಪಕ್ವ ಹಣ ನೀಡಲಾಗುವುದು.



ಏನಿದು ಭಾಗ್ಯಲಕ್ಷ್ಮಿ ಯೋಜನೆ


ಹೆಣ್ಣು ಮಗುವಿನ ಸ್ಥಾನವನ್ನು ಮೊದಲು ಕುಟುಂಬದಲ್ಲಿ ನಂತರ ಸಮಾಜದಲ್ಲಿ ಹೆಚ್ಚಿಸಲು ಮತ್ತು ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನ ಉತ್ತೇಜಿಸಲು 2006-07ನೇ ಸಾಲಿನಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆ "ಭಾಗ್ಯಲಕ್ಷ್ಮಿ" ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಯಿತು.

 ಈ ಯೋಜನೆಯ ಆರ್ಥಿಕ ಸೌಲಭ್ಯವನ್ನು ಹೆಣ್ಣು ಮಗುವಿಗೆ ಅದರ ತಾಯಿ/ತಂದೆ/ಪೋಷಕರ ಮೂಲಕ ಕೆಲವು ನಿಬಂಧನೆಗಳನ್ನು ಪೂರೈಸಿದಲ್ಲಿ ನೀಡಲಾಗುವುದು.
← ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬಗಳಲ್ಲಿ 31.3.2006ರ ನಂತರ ಜನಿಸಿದ ಹೆಣ್ಣು ಮಕ್ಕಳು ಈ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸಿಕೊಳ್ಳಲು ಆರ್ಹರಿರುತ್ತಾರೆ.


ಮಗು ಜನಿಸಿದ ಒಂದು ವರ್ಷದೊಳಗೆ ಜನನ ಪ್ರಮಾಣ ಪತ್ರವನ್ನು ಒದಗಿಸಿ ನೋಂದಾಯಿಸಲು ಅವಕಾಶವಿದೆ.


ಈ ಯೋಜನೆಯ ಸೌಲಭ್ಯಗಳನ್ನು ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬದ ಇಬ್ಬರು ಹೆಣ್ಣುಮಕ್ಕಳಿಗೆ ಸೀಮಿತಗೊಳಿಸಲಾಗಿದೆ.


ಫಲಾನುಭವಿ ಹೆಣ್ಣುಮಗುವಿನ ತಂದೆ ಅಥವಾ ತಾಯಿ ಶಾಶ್ವತ ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡಿರತಕ್ಕದ್ದು ಮತ್ತು ಕುಟುಂಬದಲ್ಲಿ ಮಕ್ಕಳ ಸಂಖ್ಯೆ 2ಕ್ಕಿಂತ ಹೆಚ್ಚಿಗೆ ಇರಬಾರದು.


ನೋಂದಣಿ ನಂತರ ಹಾಗೂ ಪೂರ್ಣ ಪರಿಶೀಲನೆ ನಂತರ ದಿನಾಂಕ:31.07.2008ರವರೆಗೆ ಜನಿಸಿದ ಪ್ರತಿ ಫಲಾನುಭವಿಗೆ ರೂ.10,000/-ಗಳನ್ನು ಆಯ್ಕೆಯಾದ ಪಾಲುದಾರ ಹಣಕಾಸು ಸಂಸ್ಥೆಯಲ್ಲಿ ನಿಶ್ಚಿತ ಠೇವಣಿಯನ್ನು ಇಡಲಾಗಿದೆ.


ಪಾಲುದಾರ ಹಣಕಾಸು ಸಂಸ್ಥೆಯು ಹೆಣ್ಣುಮಗುವಿನ ಹೆಸರಿನಲ್ಲಿ ಇಟ್ಟ ರೂ.10,000/-ಗಳ ಠೇವಣಿಯ ಮೇಲಿನ ಆದಾಯವನ್ನು ಗರಿಷ್ಠಗೊಳಿಸಿ, ಠೇವಣಿ ಹಣವನ್ನು ಬಡ್ಡಿ ಸಮೇತವಾಗಿ ಫಲಾನುಭವಿಗಳಿಗೆ 18 ವರ್ಷಗಳು ಪೂರ್ಣಗೊಂಡನಂತರ ದೊರಕಿಸಿಕೊಡುತ್ತದೆ.


ಮೊದಲ ಮಗುವಿಗೆ ಪರಿಪಕ್ವ ಮೊತ್ತ ರೂ.34,751/-ನ್ನು ಮತ್ತು ಎರಡನೇ ಮಗುವಿಗೆ ರೂ.40,918/-ನ್ನು ನೀಡಲಾಗುತ್ತದೆ.


 ಫಲಾನುಭವಿಗೆ ವಿದ್ಯಾರ್ಥಿ ವೇತನ, ವಿಮೆ ಸೌಲಭ್ಯ ಮುಂತಾದ ಮಧ್ಯಂತರ ಸಂದಾಯಗಳನ್ನು ಯೋಜನೆಯಡಿ ತಿಳಿಸಲಾದ ಅರ್ಹತೆ ಮಾನದಂಡಗಳನ್ನು ಪೂರೈಸಿದಲ್ಲಿ ನೀಡಲಾಗುವುದು.


• ದಿನಾಂಕ:01.04.2006 ರಿಂದ 31.07.2008ರ ವರೆಗೆ ಜನಿಸಿ ಯೋಜನೆಯಡಿ ನೋಂದಣಿಯಾದ ಮಕ್ಕಳು ವಿದ್ಯಾರ್ಥಿ ವೇತನ ಪಡೆಯಲು ಪ್ರತಿ ತರಗತಿಯಲ್ಲಿಯೂ ವರ್ಷದಿಂದ ವರ್ಷಕ್ಕೆ ತೇರ್ಗಡೆ ಹೊಂದಬೇಕು.

ಈ ಯೋಜನೆಯನ್ನು ದಿನಾಂಕ:20.01.2009ರಂದು ಪರಿಷ್ಕರಿಸಲಾಗಿರುತ್ತದೆ. (ದಿನಾಂಕ: 01.08.2008 ರಿಂದ ಜನಿಸಿದ ಹೆಣ್ಣು ಮಕ್ಕಳಿಗೆ ಅನ್ವಯಿಸುತ್ತದೆ).


ಪರಿಷ್ಕರಿಸಲಾದ ಯೋಜನೆಯ ರೂಪುರೇಷೆಗಳು ಕೆಳಕಂಡಂತಿವೆ.
ಯೋಜನೆಯಡಿ ನೋಂದಣಿಯಾದ ಕುಟುಂಬದಲ್ಲಿನ ಮೊದಲನೇ ಹೆಣ್ಣು ಮಗುವಿನ ಹೆಸರಿನಲ್ಲಿ ರೂ. 19,300/- ಹಾಗೂ ಅದೇ ಕುಟುಂದಲ್ಲಿನ 2ನೇ ಹೆಣ್ಣು ಮಗುವಿನ ಹೆಸರಿನಲ್ಲಿ ರೂ. 18,350/- ಗಳನ್ನು ಪಾಲುದಾರ ಹಣಕಾಸು ಸಂಸ್ಥೆಯಲ್ಲಿ ಪ್ರಾರಂಭಿಕ ಠೇವಣಿ ಇಡಲಾಗುತ್ತದೆ.


18 ವರ್ಷ ಪೂರ್ಣಗೊಂಡ ನಂತರದಲ್ಲಿ ಹೆಣ್ಣು ಮಕ್ಕಳು ರೂ. 1,00,000/- ಪರಿಪಕ್ಷ ಮೊತ್ತ ಪಡೆಯಲು ಅರ್ಹರಿರುತ್ತಾರೆ.


ಯೋಜನೆಯ ಉದ್ದೇಶಗಳು:
ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನವನ್ನು ಉತ್ತೇಜಿಸುವುದು ಮತ್ತು ಆತ್ಮ ಧೈರ್ಯ ತುಂಬುವುದು.


ಬಾಲ ಕಾರ್ಮಿಕತೆ, ಹೆಣ್ಣು ಭ್ರೂಣಹತ್ಯೆ, ಬಾಲ್ಯ ವಿವಾಹ ಮತ್ತು ಹೆಣ್ಣು ಮಕ್ಕಳ ಮಾರಾಟ ಮುಂತಾದ ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟುವುದು.


 ಆರೋಗ್ಯ, ಶಿಕ್ಷಣ, ಪೋಷಣೆ ಮತ್ತು ಪೌಷ್ಠಿಕ ಮಟ್ಟವನ್ನು ಉತ್ತಮ ಪಡಿಸುವುದರ ಮೂಲಕ ಹೆಣ್ಣು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯನ್ನು ಉತ್ತಮಪಡಿಸುದು.


 ಹೆಣ್ಣು ಮಗುವಿಗೆ ಆರ್ಥಿಕ ನೆರವು ನೀಡುವುದರ ಮೂಲಕ ಅವರನ್ನು ಸಮಾಜದಲ್ಲಿ ಸದೃಢರನ್ನಾಗಿ ಮಾಡುವುದು.
ಪ್ರಸ್ತುತ ಯೋಜನೆಯ ಸೌಲಭ್ಯ ಪಡೆಯಲು ಇರಬೇಕಾದ

ಅರ್ಹತೆಯ ಅಂಶಗಳು:
• ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಗುರುತಿಸಿ ಶಾಶ್ವತ ಬಿಪಿಎಲ್ ಕಾರ್ಡ್/ಆದ್ಯತಾ ಕುಟುಂಬ ಪಡಿತರ ಚೀಟಿ ಹೊಂದಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಎರಡು ಹೆಣ್ಣು ಮಕ್ಕಳು ಯೋಜನೆಯಡಿ ನೊಂದಣಿ ಮಾಡಲು ಅರ್ಹರಿರುತ್ತಾರೆ.


• ಕುಟುಂಬದಲ್ಲಿ ಮಕ್ಕಳ ಸಂಖ್ಯೆ ಎರಡನ್ನು ಮೀರಿರಬಾರದು. ಈ ಕುಟುಂಬವು ಮಗುವಿನ ತಂದೆ ಅಥವಾ ತಾಯಿ

ಯಾರದಾರೊಬ್ಬರು ಶಾಶ್ವತ ಕುಟುಂಬ ಯೋಜನೆಯ ಪದ್ಧತಿಯನ್ನು ಅಳವಡಿಸಿಕೊಂಡಿರಬೇಕು. ವಿಶೇಷ ಪ್ರಕರಣಗಳಲ್ಲಿ ಅಂದರೆ ಮೊದಲನೇ ಹೆರಿಗೆಯಲ್ಲಿ ಅವಳಿ ತ್ರಿವಳಿ ಹೆಣ್ಣು ಮಕ್ಕಳು ಜನಿಸಿದ್ದಲ್ಲಿ ಹಾಗು ಎರಡನೇ ಹೆರಿಗೆಯಲ್ಲಿ ಅವಳಿ/ತ್ರಿವಳಿ ಹೆಣ್ಣು ಮಕ್ಕಳು ಜನಿಸಿದ್ದಲ್ಲಿ ಈ ಎಲ್ಲಾ ಹೆಣ್ಣು ಮಕ್ಕಳಿಗೂ ಸೌಲಭ್ಯ ನೀಡುವುದು. ಈ ಸೌಲಭ್ಯವನ್ನು ಎರಡು ಹೆರಿಗೆಗೆ ಮಾತ್ರ ಮಿತಿಗೊಳಿಸುವುದು. ಇಂತಹ ಪ್ರಕರಣಗಳಲ್ಲಿ ಮಾತ್ರ ಕುಟುಂಬದ ಮಕ್ಕಳ ಸಂಖ್ಯೆ ಎರಡನ್ನು ಮೀರಿರಬಾರದು ಎಂಬ ನಿಯಮವನ್ನು ಸಡಿಲಿಸಲಾಗಿದೆ.

ಈ ಯೋಜನೆಯನ್ನು ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲೂ ಅನುಷ್ಟಾನಗೊಳಿಸಲಾಗುವುದು. ಅಂಗನವಾಡಿ ಕೇಂದ್ರಗಳು ಇಲ್ಲದೆ ಇರುವ ಪ್ರದೇಶಗಳಲ್ಲಿ ವಾಸಿಸುವ ಪೋಷಕರು ತಮ್ಮ ಸಮೀಪದ ಅಂಗನವಾಡಿ ಕೇಂದ್ರದಲ್ಲಿ ನೊಂದಣಿ ಮಾಡುವುದು. ಮಗುವಿನ ಜನನವನ್ನು ಕಡ್ಡಾಯವಾಗಿ ನೊಂದಾಯಿಸಿರಬೇಕು ಹಾಗೂ ಜನನ ಪ್ರಮಾಣ ಪತ್ರವನ್ನು ಹೊಂದಿರಬೇಕು.
ಪರಿಪಕ್ವ ಮೊತ್ತವನ್ನು ಪಡೆಯಲು ಫಲಾನುಭವಿ ಮಗು ಕನಿಷ್ಠ 8ನೇ ತರಗತಿಯವರೆಗೆ ವಿದ್ಯಾಭ್ಯಾಸವನ್ನು ಪಡೆದಿರಬೇಕು. ಆದರೆ ವಿಕಲಚೇತನ ಮಕ್ಕಳಿಗೆ ವಿನಾಯಿತಿ ನೀಡಲಾಗಿದ್ದು, ಸದರಿ ಮಕ್ಕಳು 1 ರಿಂದ 5ನೇ ತರಗತಿವರೆಗೆ ವ್ಯಾಸಂಗ ಮಾಡಿರಬೇಕು. ಒಂದು ವೇಳೆ ವಿಕಲಚೇತನ ಮಕ್ಕಳು ತೀವ್ರತರವಾದ ವಿಕಲತೆಯಿಂದ ಬಳಲುತ್ತಿದ್ದಲ್ಲಿ ಸಂಬಂಧಪಟ್ಟ ಜಿಲ್ಲಾ ಉಪ ನಿರ್ದೆಶಕರು ಪ್ರತಿ ಪ್ರಕರಣಗಳ ಸಾಧಕ ಬಾಧಕಗಳನ್ನು ಪರಿಶೀಲಿಸಿ ಈ ಷರತ್ತನ್ನು ಸಹ ಸಡಿಲಿಸಲು ಅಧಿಕಾರ ನೀಡಿ ಆದೇಶಿಸಿದೆ.


• 5ನೇ ಮತ್ತು 8ನೇತರಗತಿ ಉತ್ತೀರ್ಣರಾಗಿರುವ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರಿಂದ ದೃಢೀಕರಣ ಪಡೆದು ಸಲ್ಲಿಸುವುದು.


• ಬಾಲಕಾರ್ಮಿಕ ನಿಷೇಧ ಕಾಯ್ದೆ 1986ರಂತೆ ಬಾಲ ಕಾರ್ಮಿಕಳಾಗಿರತಕ್ಕದ್ದಲ್ಲ.


• 18 ವರ್ಷ ಪೂರೈಸುವ ಮೊದಲು ವಿವಾಹವಾಗತಕ್ಕದ್ದಲ್ಲ.
ಆಯ್ಕೆಯಾದ ಫಲಾನುಭವಿಯು ಮೇಲೆ ತಿಳಿಸಿದ ಅರ್ಹತೆಯ ಮಾನದಂಡಗಳಲ್ಲಿನ ಯಾವುದೇ ಒಂದು ಷರತ್ತುನ್ನು ಪೂರೈಸದಿದ್ದಲ್ಲಿಯೂ ಸಹ ಸೌಲಭ್ಯವನ್ನು ಮುಟ್ಟುಗೋಲು ಹಾಕಲಾಗುವುದು.

]]>
Wed, 05 Mar 2025 14:58:04 +0530 shivuagrico
ನಿಮ್ಮ ಊರಿನಲ್ಲಿ ಹೊಸ ಗ್ರಾಮ ಒನ್ ಸ್ಥಾಪನೆಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ&How to apply for gram one franchise https://krushirushi.in/How-to-apply-for-gram-one-franchise-1915 https://krushirushi.in/How-to-apply-for-gram-one-franchise-1915  ನಿಮ್ಮ ಊರಿನಲ್ಲಿ ಹೊಸ ಗ್ರಾಮ ಒನ್ ಸ್ಥಾಪನೆಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-How to apply for gram one franchise 

ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್(Gram one online application) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಟಾನಗೊಳಿಸುತ್ತಿದ್ದು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆ.15 ಕಡೆಯ ದಿನವಾಗಿದ್ದು ಆಸಕ್ತಿವುಳ್ಳವರು ಅರ್ಜಿಗಳನ್ನು https://www.karnatakaone.gov.in/Public/GramOneFrachiseeTerms  ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು ಹಾಗೂ ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಗ್ರಾಮಓನ್ ನಲ್ಲಿ ಸಿಗುವ ಸೇವೆಗಳು ಹಾಗೂ ಅದಕ್ಕೆ ಬೇಕಾದ ದಾಖಲೆಗಳ ಪಟ್ಟಿಯನ್ನು ಈ ಕೆಳಗಿನ PDF ಮೂಲಕ ಡೌನ್ಲೋಡ್ ಮಾಡಿಕೊಳ್ಳಿ

]]>
Tue, 04 Mar 2025 21:00:05 +0530 shivuagrico
ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ&Aadhaar not linked croploss farmers list https://krushirushi.in/Aadhaar-not-linked-croploss-farmers-list-1916 https://krushirushi.in/Aadhaar-not-linked-croploss-farmers-list-1916 ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ-Aadhaar not linked croploss farmers list

15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635 

ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/AadharNotSeededReport.aspx

ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ

Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ - https://krushirushi.in/Tahasildar-varification-status-approved-1634

]]>
Tue, 04 Mar 2025 20:31:49 +0530 shivuagrico
Annabhagya list&ಈ ಪಟ್ಟಿಯಲ್ಲಿರುವವರಿಗೆ ಈ ತಿಂಗಳು ಸಿಗಲಿದೆ 15 ಕೆಜಿ ಅನ್ನಭಾಗ್ಯ ಅಕ್ಕಿ https://krushirushi.in/Annabhagya-list-1914 https://krushirushi.in/Annabhagya-list-1914 Annabhagya list-ಈ ಪಟ್ಟಿಯಲ್ಲಿರುವವರಿಗೆ ಈ ತಿಂಗಳು ಸಿಗಲಿದೆ 15 ಕೆಜಿ ಅನ್ನಭಾಗ್ಯ ಅಕ್ಕಿ

ಅನ್ನಭಾಗ್ಯ ಫಲಾನುಭವಿಗಳಿಗೆ ಸಿಹಿಸುದ್ದಿ ಎನ್ನುವಂತೆ ಈ ತಿಂಗಳು ಕುಟುಂಬದ ಪ್ರತಿ ಸದಸ್ಯರಿಗೆ ತಲಾ 15 ಕೆ.ಜೆ ಅಕ್ಕಿಯನ್ನು ವಿತರಿಸಲಾಗುತ್ತದೆ. 


ಈ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್ ಮುನಿಯಪ್ಪ ಮಾಹಿತಿ ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆ.ಜಿ. ಅಕ್ಕಿಯನ್ನು ಸೇರಿಸಿ, ಈ ತಿಂಗಳು 15 ಕೆ.ಜಿ. ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. 


ಅಂದಹಾಗೇ ರಾಜ್ಯ ಸರ್ಕಾರದಿಂದ ಈ ಮೊದಲು ಹತ್ತು ಕೆಜಿ ಅಕ್ಕಿ ಹಾಗೂ ಹೆಚ್ಚುವರಿ ಐದು ಕೆಜಿ ಅಕ್ಕಿಯ ಬದಲಾಗಿ ಹಣವನ್ನು ಅನ್ನಭಾಗ್ಯ ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುತ್ತಿತ್ತು. ಅದನ್ನು ನಿಲ್ಲಿಸಲಾಗಿದ್ದು, ಈ ತಿಂಗಳು ಅನ್ನಭಾಗ್ಯ ಫಲಾನುಭವಿಗಳಿಗೆ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 15 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತದೆ.


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 10ಕೆಜಿ ಅನ್ನಭಾಗ್ಯ ಅಕ್ಕಿ(Annabhagya)

]]>
Tue, 04 Mar 2025 17:23:46 +0530 shivuagrico
Gruhalakshmi list&ಕೊನೆಗೂ ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಯ್ತು 2 ತಿಂಗಳ ಗೃಹಲಕ್ಷ್ಮಿ ಹಣ https://krushirushi.in/Gruhalakshmi-list-1913 https://krushirushi.in/Gruhalakshmi-list-1913 Gruhalakshmi list-ಕೊನೆಗೂ ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಯ್ತು 2 ತಿಂಗಳ ಗೃಹಲಕ್ಷ್ಮಿ ಹಣ

ಫೆಬ್ರವರಿ.21ರಂದು ಈ ವಿಷಯವಾಗಿ ಮಾತನಾಡಿದ್ದಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕ‌ರ್ ಅವರು, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದಿದ್ದರು. 


ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದಿದ್ದರು.

ಅದರಂತೆ ಇಂದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ರೂ.4000  ಬಾಕಿ ಹಣವನ್ನು ಬ್ಯಾಂಕ್‌ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ. ಇಂದು ಅನೇಕ ಯಜಮಾನಿ ಮಹಿಳೆಯರ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗಿರುವುದಾಗಿ ತಿಳಿದು ಬಂದಿದೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಳ‌ರ್ ಅವರು, ಈಗಾಗಲೇ ನವೆಂಬ‌ರ್ ತಿಂಗಳ ಹಣವನ್ನು ಎಲ್ಲರ ಅಕೌಂಟ್‌ಗೆ ಹಾಕಿದ್ದೇವೆ. ಡಿಸೆಂಬರ್ ಮತ್ತು ಜನವರಿ ಎರಡು ತಿಂಗಳದ್ದು ಬಾಕಿ ಇದೆ. ಡಿಸೆಂಬರ್‌ದು ಇವತ್ತು ಬಿಲ್ಲಿಂಗ್‌ ನಡೀತಾ ಇದೆ. ನಾಲೈದು ದಿನದಲ್ಲಿ ಮಹಿಳೆಯರ ಅಕೌಂಟ್‌ಗೆ ಹಣ ಜಮಾವಣೆ ಆಗುತ್ತದೆ. ಡಿಸೆಂಬರ್ ಮುಗಿಸಿದ ತಕ್ಷಣ ಜನವರಿ ಮತ್ತು ಫೆಬ್ರವರಿ ತಿಂಗಳದ್ದು ಮತ್ತೆ ತಗೋತೀವಿ. ಆ ಬಳಿಕ ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ಹೇಳಿದರು.


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Mon, 03 Mar 2025 21:16:41 +0530 shivuagrico
Safflower MSP&ಈ ಜಿಲ್ಲೆಯ ರೈತರಿಂದ ಬೆಂಬಲ ಬೆಲೆಯಲ್ಲಿ ಕುಸುಬಿ ಖರೀದಿ https://krushirushi.in/Safflower-MSP-1912 https://krushirushi.in/Safflower-MSP-1912 Safflower MSP-ಈ ಜಿಲ್ಲೆಯ ರೈತರಿಂದ ಬೆಂಬಲ ಬೆಲೆಯಲ್ಲಿ ಕುಸುಬಿ ಖರೀದಿ

ಕರ್ನಾಟಕದ ಕುಸುಬೆ(Safflower) ಬೆಳೆಗಾರರಿಗೆ ಸರ್ಕಾರವು ಸಂತಸದ ಸುದ್ದಿಯನ್ನು ನೀಡಿದೆ. ಮಾರುಕಟ್ಟೆಯಲ್ಲಿ ಕುಸಿದಿರುವ ಕುಸುಬೆ ಬೆಲೆಗೆ ಪರಿಹಾರವಾಗಿ, ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ ₹5,940 ದರವನ್ನು ನಿಗದಿಪಡಿಸಲಾಗಿದೆ.


ಇದರಿಂದಾಗಿ ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಕೃಷಿ ಮಾರುಕಟ್ಟೆ ಸಚಿವರು ಈ ಕುರಿತು ಮಾಹಿತಿ ನೀಡಿದ್ದು, ಮಾರುಕಟ್ಟೆಯಲ್ಲಿನ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಒಳಗಾಗಿದ್ದ ರೈತರಿಗೆ ಈ ಬೆಂಬಲ ಬೆಲೆ ಸಹಾಯ ಮಾಡಲಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಕುಸುಬೆ(Kusube) ಕಟಾವು ಪ್ರಕ್ರಿಯೆ ಆರಂಭವಾಗಿದ್ದು, ಮಾರ್ಚ್ ಅಂತ್ಯದವರೆಗೆ ನಡೆಯಲಿದೆ ಮತ್ತು ಏಪ್ರಿಲ್ ವರೆಗೂ ಮಾರುಕಟ್ಟೆಗೆ ಕುಸುಬೆ ಆವಕವಾಗಲಿದೆ.

ರೈತರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುವ ಬದಲು, ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುವಂತೆ ಸಚಿವರು ಮನವಿ ಮಾಡಿದ್ದಾರೆ.

]]>
Mon, 03 Mar 2025 12:51:26 +0530 shivuagrico
FID based bele parihara&FID ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆವಿಮೆ,ಬೆಳೆಹಾನಿ,ಸಬ್ಸಿಡಿ ಸಹಾಯಧನ,ಆಧಾರ್ ನಂಬರ್ ಹಾಕಿ ನಿಮ್ಮ ಎಫ್ಐಡಿ ತಿಳಿದುಕೊಳ್ಳಿ https://krushirushi.in/FID-based-bele-parihara-1908 https://krushirushi.in/FID-based-bele-parihara-1908 FID based bele parihara-FID ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆವಿಮೆ,ಬೆಳೆಹಾನಿ,ಸಬ್ಸಿಡಿ ಸಹಾಯಧನ,ಆಧಾರ್ ನಂಬರ್ ಹಾಕಿ ನಿಮ್ಮ ಎಫ್ಐಡಿ ತಿಳಿದುಕೊಳ್ಳಿ


ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.

 ಏನಿದು ಫ್ರೂಟ್ಸ್ ನಂಬರ್


 ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.



ನಿಮ್ಮ FID ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDetailsByAadhaar.aspx 

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.

FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

 ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್‍ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.

 ಏಕೆ ನೋಂದಾಯಿಸಬೇಕು?


 ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್  ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ


ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.

ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.

ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು

]]>
Sun, 02 Mar 2025 16:24:51 +0530 shivuagrico
ಪಿಎಂ ಕಿಸಾನ್ 20ನೇ ಕಂತು ಸೇರಿದಂತೆ 2025 ನೇ ಸಾಲಿನ ಪಿಎಂ ಕಿಸಾನ್ ಕಂತುಗಳ ದಿನಾಂಕ ಪ್ರಕಟ&Pmkisan instalment dates https://krushirushi.in/Pmkisan-instalment-dates-1907 https://krushirushi.in/Pmkisan-instalment-dates-1907 ಪಿಎಂ ಕಿಸಾನ್ 20ನೇ ಕಂತು ಸೇರಿದಂತೆ 2025 ನೇ ಸಾಲಿನ ಪಿಎಂ ಕಿಸಾನ್ ಕಂತುಗಳ ದಿನಾಂಕ ಪ್ರಕಟ-Pmkisan instalment dates

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬ‌ರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಡಿಸೆಂಬರ್ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ

Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್‌ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698 

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732

]]>
Sun, 02 Mar 2025 06:57:11 +0530 shivuagrico
Crop insurance rejected list&ಬೆಳೆ ವಿಮೆ ತಿರಸ್ಕೃತಗೊಂಡ ಅರ್ಜಿಗಳ ಪಟ್ಟಿ ಬಿಡುಗಡೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಆಕ್ಷೇಪಣೆ ಸಲ್ಲಿಸಿ https://krushirushi.in/Crop-insurance-rejected-list-1906 https://krushirushi.in/Crop-insurance-rejected-list-1906 Crop insurance rejected list-ಬೆಳೆ ವಿಮೆ ತಿರಸ್ಕೃತಗೊಂಡ ಅರ್ಜಿಗಳ ಪಟ್ಟಿ ಬಿಡುಗಡೆ

ಪ್ರಧಾನ ಮಂತ್ರಿ ಫಸಲ್ ಭೀಮಾ(Pradan mantri fasal bheema yojana) ಯೋಜನೆಯಡಿ 2023-24 ನೇ ಸಾಲಿನ ಮುಂಗಾರು(Kharif), ಹಿಂಗಾರು(Rabi) ಮತ್ತು ಬೇಸಿಗೆ(Summer) ಹಂಗಾಮುಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ, ಬೆಳೆ ಸಮೀಕ್ಷೆಯ(crop survey) ದತ್ತಾಂಶಗಳನ್ನು ಬೆಳೆ ನೋಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗಳನ್ನು ಅಳವಡಿಸಿ ತಾಳೆಯಾದ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾಂಶದಲ್ಲಿ ವಿಮಾ ಪರಿಹಾರ ಲೆಕ್ಕಹಾಕಲಾಗಿದೆ. 

ತಾಳೆಯಾಗದೆ ಇರುವ ಪ್ರಸ್ತಾವನೆಗಳನ್ನು ಉಲ್ಲೇಖಿತ ಸರ್ಕಾರದ ಆದೇಶದಂತೆ ಸಂಬಂಧಪಟ್ಟ ತಾಲ್ಲೂಕು (ಕೃಷಿ/ತೋಟಗಾರಿಕೆ/ಬ್ಯಾಂಕ್) ಮಟ್ಟದ ಅಧಿಕಾರಿಗಳಿಗೆ ಪರಿಶೀಲಿಸಲು ಸಂರಕ್ಷಣೆ ತಂತ್ರಾಂಶದ ಮೂಲಕ ಕಳುಹಿಸಲಾಗಿತ್ತು. ತಾಲ್ಲೂಕು ಮಟ್ಟದ ಅಧಿಕಾರಿಗಳು ಸದರಿ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆಯಲ್ಲಿ ದಾಖಲಾದ ಛಾಯಚಿತ್ರದೊಂದಿಗೆ ಪರಿಶೀಲಿಸಿ ಸಂಬಂಧಪಟ್ಟ ವಿಮಾ ಸಂಸ್ಥೆಯವರಿಗೆ Accept ಅಥವಾ Reject ಮಾಡಲು ಶಿಫಾರಸ್ಸು ಮಾಡಿರುತ್ತಾರೆ, ತದನಂತರ ವಿಮಾ ಸಂಸ್ಥೆಯವರು ಪ್ರಸ್ತಾವನೆಗಳನ್ನು ಮರುಪರಿಶೀಲಿಸಿ ಅಂತಿಮವಾಗಿ Accept ಅಥವಾ Reject ಮಾಡಿರುತ್ತಾರೆ.

ಪ್ರಸ್ತುತ ಸಂರಕ್ಷಣೆ ತಂತ್ರಾಂಶದನ್ವಯ ಮುಂಗಾರು ಹಂಗಾಮಿನಲ್ಲಿ Reject ಆದ 5356 ಪುಸ್ತಾವನೆಗಳು, ಹಿಂಗಾರು ಹಂಗಾಮಿನಲ್ಲಿ Reject ಆದ 2763 ಪ್ರಸ್ತಾವನೆಗಳು ಮತ್ತು ಬೇಸಿಗೆ ಹಂಗಾಮಿನಲ್ಲಿ 4 ಪ್ರಸ್ತಾವನೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 

ಪ್ರಸ್ತುತ ತಿರಸ್ಕೃತಗೊಂಡ(Crop insurance rejected list)ಪ್ರಸ್ತಾವನೆಗಳ ಕುರಿತು ತಾಲ್ಲೂಕು/ಹೋಬಳಿ ಮಟ್ಟದಲ್ಲಿ ರೈತರಿಗೆ ಮಾಹಿತಿಯನ್ನು ನೀಡಲು ಸೂಚಿಸಿದೆ ಹಾಗೂ ಸದರಿ ಪಟ್ಟಿಯನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ ಮತ್ತು ಜಿಲ್ಲೆಯ ಪ್ರಾದೇಶಿಕ ದಿನ ಪತ್ರಿಕೆಗಳಲ್ಲಿ ಪ್ರಕಟಿಸಲಾಗಿದೆ.

ಮಾಹಿತಿಯನ್ನು ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ವಿಮಾ ಅರ್ಜಿ ತಿರಸ್ಕೃತಗೊಂಡ ಬಗ್ಗೆ ಆಕ್ಷೇಪಣೆಗಳನ್ನು ಪಡೆಯಬಹುದಾಗಿರುತ್ತದೆ. ಸಂಬಂಧಪಟ್ಟ ರೈತರು ಆಕ್ಷೇಪಣೆ ಇದ್ದಲ್ಲಿ ಮಾತ್ರ ಮನವಿಯನ್ನು ಸಲ್ಲಿಸಲು ಹಾಗೂ ಮರುಪರಿಶೀಲಿಸಲು, ಸದರಿ ಮನವಿಯೊಂದಿಗೆ ಬೆಳೆ ವಿಮೆಗೆ ನೋಂದಣಿಯಾಗಿರುವ ಬೆಳೆಯನ್ನು ಬೆಳೆದಿರುವ ಕುರಿತು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಅಂತಹ ಮನವಿಗಳನ್ನು ತಾಲ್ಲೂಕು ಮಟ್ಟದ ಸಮಿತಿಯಲ್ಲಿ ಮಂಡಿಸಿ ಕೂಲಂಕುಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದು. ತಾಲ್ಲೂಕು ಮಟ್ಟದ ಸಮಿತಿಯ ನಿರ್ಣಯವನ್ನು ರೈತ ಒಪ್ಪದಿದ್ದಲ್ಲಿ, ಜಿಲ್ಲಾ ಮಟ್ಟದ ಸಮಿತಿಗೆ ಮೇಲ್ಮನವಿ ಸಲ್ಲಿಸಬಹುದು. ಜಿಲ್ಲಾ ಮಟ್ಟದ ಸಮಿತಿಯ ನಿರ್ಧಾರವು ಅಂತಿಮವಾಗಿರುತ್ತದೆ. ಆಯಾ ತಾಲ್ಲೂಕಿನಲ್ಲಿ ಯಾವುದೇ ಆಕ್ಷೇಪಣೆಗಳು 15 ದಿನಗಳೊಳಗಾಗಿ ರೈತರಿಂದ ಬಂದಿಲ್ಲದಿದ್ದರೆ, ತಾಲ್ಲೂಕಿನ ಎಲ್ಲಾ ಪ್ರಸ್ತಾವನೆಗಳನ್ನು reject ಮಾಡುವುದು.

ತದನಂತರ, ತಾಲ್ಲೂಕು/ ಜಿಲ್ಲಾ ಸಮಿತಿಯ ನಡವಳಿಯನ್ವಯ ಸಂರಕ್ಷಣೆ ತಂತ್ರಾಂಶದಲ್ಲಿ PMFBY(loanee and Non Loanee proposals) ಅಧಿಕಾರಿಗಳ login ನಲ್ಲಿ ಹಾಗೂ PMFBY ತೋಟಗಾರಿಕೆ ಬೆಳೆಗಳನ್ನು (loanee and Non Loanee proposals) ತಾಲ್ಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳ login ನಲ್ಲಿ ಸಿಂಧುವಾದ ಪ್ರಸ್ತಾವನೆಗಳನ್ನು (accepted proposals) accept ಮಾಡುವುದು, ಉಳಿದ ಪ್ರಸ್ತಾವನೆಗಳನ್ನು reject ಮಾಡುವುದು. ಸಂರಕ್ಷಣೆ ತಂತ್ರಾಂಶದಲ್ಲಿ ಪ್ರಸ್ತಾವನೆಗಳನ್ನು accept ಅಥವ reject ಮಾಡುವಲ್ಲಿ ಜಾಗೃತತೆಯನ್ನು ವಹಿಸಲು ಸೂಚಿಸಿದೆ. 


ವಿಶೇಷ ಸೂಚನೆ: ಎಲ್ಲಾ ಹಂತದ ಸಭೆಗಳಲ್ಲಿ ವಿಮಾ ಸಂಸ್ಥೆ ಹಾಗೂ ತೋಟಗಾರಿಕೆ ಇಲಾಖೆ 
ಅಧಿಕಾರಿಯವರ ಉಪಸ್ಥಿತಿ ಹಾಗೂ ಕೈಗೊಳ್ಳುವ ನಿರ್ಧಾರಗಳಲ್ಲಿ ವಿಮಾ ಸಂಸ್ಥೆಯವರ ಸಹಮತಿ * ಅವಶ್ಯವಿರುತ್ತದೆ. ತಿರಸ್ಕೃತಗೊಂಡ ಪ್ರಸ್ತಾವನೆಗಳ ಕುರಿತು ಪ್ರಚಾರ ಪಡಿಸಿರುವ ಬಗ್ಗೆ, ಸಭೆಯ ನಡವಳಿಯ ಪ್ರತಿಯನ್ನು ಹಾಗೂ ಸಿಂಧುವಾದ ಪ್ರಸ್ತಾವನೆಗಳ (accepted proposals) ಅಗತ್ಯ ದಾಖಲೆಗಳನ್ನು ವಿಮಾ ಸಂಸ್ಥೆಯವರಿಗೆ ಒದಗಿಸತಕ್ಕದು. ಕೇಂದ್ರ ಕಛೇರಿಗೆ ತಿರಸ್ಕೃತಗೊಂಡ ಪ್ರಸ್ತಾವನೆಗಳ ಕುರಿತು ಪ್ರಚಾರ ಪಡಿಸಿರುವ ಬಗ್ಗೆ ಮತ್ತು ಸಭೆಯ ನಡವಳಿಯ ಪ್ರತಿಯನ್ನು ಸಲ್ಲಿಸಿದ ನಂತರ ಸಭೆಯ ನಡವಳಿಯಂತೆ ಪ್ರಸ್ತಾವನೆಗಳನ್ನು ಇತ್ಯರ್ಥಪಡಿಸಲು ವಿಮಾ ಸಂಸ್ಥೆಯವರಿಗೆ ಸೂಚಿಸಲಾಗುವುದು. 


ತಾಲ್ಲೂಕು/ಜಿಲ್ಲಾ ಮಟ್ಟದ ಸಮಿತಿಯ ಸಭೆಗಳಲ್ಲಿ ಆಕ್ಷೇಪಿಸಿದ ಪ್ರಸ್ತಾವನೆಗಳನ್ನು ಪರಿಶೀಲಿಸಲು ಗಮನಿಸಬೇಕಾದ ಅಂಶಗಳು ಈ ಕೆಳಕಂಡಂತಿದೆ, 
1) 2023-24ರ ಪಹಣಿ ಪತ್ರಿಕೆಯಲ್ಲಿ (RTC) ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರಬೇಕು. 
2) ಬೆಂಬಲ ಬೆಲೆ ಪ್ರಯೋಜನ ಪಡೆದಿದಲ್ಲಿ, ರಶೀದಿ ಪಡೆದು ಪರಿಶೀಲಿಸುವುದು. 
3) ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನು APMC ಮಾರುಕಟ್ಟೆಗೆ ಮಾರಾಟ ಮಾಡಿದ್ದಲ್ಲಿ ಸದರಿ ದಾಖಲೆ ಪಡೆದು ಪರಿಶೀಲಿಸುವುದು.

ತಿರಸ್ಕೃತ ಗೊಂಡಿರುವ ಬೆಳೆ ವಿಮೆ ಪ್ರಸ್ತಾವನೆಗಳ ರೈತರ ಪಟ್ಟಿಯನ್ನು ಗ್ರಾಮ ಪಂಚಾಯತ್, ರೈತ ಸಂಪರ್ಕ ಕೇಂದ್ರ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪ್ರದರ್ಶಿಸಲಾಗಿದೆ. ಸಂಬಂಧಪಟ್ಟ ರೈತರು ಆಕ್ಷೇಪಣೆ ಇದ್ದಲ್ಲಿ ಫೆಬ್ರವರಿ 27 ನೇ ದಿನಾಂಕ ಒಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಟ್ಟು ಆಕ್ಷೇಪಣೆ ಸಲ್ಲಿಸಿ.


ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "kharif" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-Proposal number ಎಂದರೆ ಬೆಳೆವಿಮೆ ಕಟ್ಟಿದ ರಶೀದಿಯಲ್ಲಿ 6 ಸಂಖ್ಯೆಯ acknowledgment number.ಒಂದು ವೇಳೆ ಬೆಳೆ ವಿಮೆ ಕಟ್ಟಿದ ರಶೀದಿ ಕಳೆದು ಹೊಗಿದ್ದರೆ ನಿಮ್ಮ ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಿ) 

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

ನಂತರ Select ಮೇಲೆ ಕ್ಲಿಕ್ ಮಾಡಿದರೆ,ಈ ಕೆಳಗಿನಂತೆ ಬೆಳೆವಿಮೆ ಕಂಪನಿಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಿರುವುದನ್ನು ತೋರಿಸುತ್ತದೆ.ಒಂದು ವೇಳೆ ಅರ್ಜಿ ತಿರಸ್ಕೃತಗೊಂಡಿದ್ದರೆ Application rejected ಎಂದು ತೋರಿಸುತ್ತದೆ.ಹಾಗೇನಾದರು ಅರ್ಜಿ ತಿರಸ್ಕೃತಗೊಂಡಿದ್ದರೆ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಟ್ಟು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅದೇ ರೀತಿ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಬೆಳೆ ವಿಮೆ ತಿರಸ್ಕೃತ ಪಟ್ಟಿಯನ್ನು(Bele vime rejected list) ಲಗತ್ತಿಸಲಾಗಿದ್ದು,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಆಕ್ಷೇಪಣೆ ಸಲ್ಲಿಸಿ.

]]>
Sat, 01 Mar 2025 18:56:57 +0530 shivuagrico
Bele sala baddi manna&ಈ ಯೋಜನೆಯಡಿ ಸಿಗಲಿದೆ ನಿಮ್ಮ ಸಾಲದ ಮೇಲೆ 3% ಬಡ್ಡಿ ಮನ್ನಾ,ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ https://krushirushi.in/Bele-sala-baddi-manna-1905 https://krushirushi.in/Bele-sala-baddi-manna-1905 Bele sala baddi manna-ಈ ಯೋಜನೆಯಡಿ ಸಿಗಲಿದೆ ನಿಮ್ಮ ಸಾಲದ ಮೇಲೆ 3% ಬಡ್ಡಿ ಮನ್ನಾ,ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

 ಕೇಂದ್ರ ವಲಯದ ಯೋಜನೆ ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಸರ್ಕಾರವು ಹಣಕಾಸು ಸೌಲಭ್ಯಗಳನ್ನು ಒದಗಿಸುತ್ತಿದ್ದು, ರೂ. 2 ಕೋಟಿ ಸಾಲದ ಮೊತ್ತಕ್ಕೆ ವಾರ್ಷಿಕ ಶೇ. 3ರಂತೆ 7 ವರ್ಷದ ಅವಧಿಗೆ ಬಡ್ಡಿ ಸಹಾಯಧನ ಲಭ್ಯವಿರುತ್ತದೆ.


ಅರ್ಹ ಕೃಷಿ ಚಟುವಟಿಕೆಗಳು/ಯೋಜನೆಗಳು ಈ ಕೆಳಗಿನಂತಿವೆ

ಇ-ಮಾರುಕಟ್ಟೆ ವೇದಿಕೆ ಸೇರಿದಂತೆ ಸರಬರಾಜು ಸರಪಳಿ ಸೇವೆಗಳು ಗೋದಾಮುಗಳು ಮತ್ತು ಸೈಲೊಗಳು + ಪ್ಯಾಕ್ ಹೌಸ್‌ಗಳು ವಿಂಗಡಣೆ ಮತ್ತು ಶ್ರೇಣೀಕರಣ ಘಟಕಗಳು ಶೀತಲಗೃಹ ಸರಪಳಿಗಳು ಸಾಗಾಣಿಕೆ ಸೌಲಭ್ಯಗಳು ಪ್ರಾಥಮಿಕ ಸಂಸ್ಕರಣಾ ಕೇಂದ್ರಗಳು ಹಣ್ಣು ಮಾಗಿಸುವ ಘಟಕಗಳು

ಮೌಲ್ಯಮಾಪನ ಘಟಕಗಳು ಸಂಕುಚಿತ ಜೈವಿಕ ಅನಿಲ (CBG) ಸ್ಥಾವರ + ಸಾವಯವ ಪರಿಕರ ಉತ್ಪಾದನೆ + ಜೈವಿಕ ಉತ್ತೇಜಕ ಉತ್ಪಾದನಾ ಘಟಕಗಳು * ಸಸ್ಯ ನರ್ಸರಿ /ಅಂಗಾಂಶ ಕೃಷಿ ಬೀಜ ಸಂಸ್ಕರಣೆ + ಕೃಷಿ ಯಂತ್ರಧಾರೆ ಕೇಂದ್ರಗಳು ಸ್ಮಾರ್ಟ್ ಮತ್ತು ನಿಖರವಾದ ಕೃಷಿ ಸಂಯೋಜಿತ ಸ್ಪಿರುಲಿನಾ ಉತ್ಪಾದನೆ ಮತ್ತು ಸಂಸ್ಕರಣಾ ಘಟಕಗಳು ರೇಷ್ಮೆ ಕೃಷಿ ಸಂಸ್ಕರಣಾ ಘಟಕ • ಜೇನು ಸಂಸ್ಕರಣಾ ಘಟಕ ಪ್ಲಾಂಟ್ ಕ್ಯಾರಂಟೈನ್ ಘಟಕಗಳು ಮತ್ತು ಸಾಮೂಹಿಕ ಕೃಷಿ ಅಡಿ: ಜಲಕೃಷಿ, ವಾಯುಕೃಷಿ, ಹಸಿರುಮನೆ, ಬಹುಮಹಡಿ ಕೃಷಿ, ಅಣಬೆ ಬೇಸಾಯ

ಅರ್ಹ ಫಲಾನುಭವಿಗಳು

ರೈತರು/ ರೈತ ಉತ್ಪಾದಕ ಸಂಸ್ಥೆಗಳು, ಪ್ರಾಂತೀಯ ಸಹಕಾರ ಒಕ್ಕೂಟಗಳು ಕೃಷಿ ಉದ್ಯಮಿಗಳು / ನವೋದ್ಯಮಿಗಳು ಪ್ರಾಥಮಿಕ ಕೃಷಿ ಕ್ರೆಡಿಟ್ ಸಹಕಾರ ಸಂಘಗಳು + ವಿವಿಧೋದ್ದೇಶ ಸಹಕಾರ ಸಂಘಗಳು * ಸ್ವ-ಸಹಾಯ ಗುಂಪುಗಳು / ಜಂಟಿ ಬಾಧ್ಯತಾ ಗುಂಪುಗಳು / ಖಾಸಗಿ ಮಾಲೀಕತ್ವ ಸಂಸ್ಥೆಗಳು.
ಯೋಜನೆಯಲ್ಲಿ ಭಾಗವಹಿಸುವ ಹಣಕಾಸು ಸಂಸ್ಥೆಗಳು:
ರಾಷ್ಟ್ರೀಕೃತ ಬ್ಯಾಂಕುಗಳು + ಶೆಡ್ಯೂಲ್ಡ್ ಸಹಕಾರಿ ಬ್ಯಾಂಕ್ ಗಳು + ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ ಗಳು ಸಣ್ಣ ಹಣಕಾಸು ಬ್ಯಾಂಕುಗಳು + ಬ್ಯಾಂಕೇತರ ಹಣಕಾಸು ಸಂಸ್ಥೆಗಳು + ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (ಎನ್ ಸಿಡಿಸಿ).

ಅರ್ಜಿ ಸಲ್ಲಿಕೆ ಪ್ರಕ್ರಿಯೆ


ಮೊದಲು ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://agriinfra.dac.gov.in/Home/Login

ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ Beneficiary ಮೇಲೆ ಕ್ಲಿಕ್ ಮಾಡಿ
ನಂತರ Benefit under other scheme ಮೇಲೆ ಕ್ಲಿಕ್ ಮಾಡಿ

ನಂತರ ನೀವು ಅರ್ಜಿ ಸಲ್ಲಿಸಲು ಬಯಸುವ ಯೋಜನೆಯ ಮೇಲೆ ಕ್ಲಿಕ್ ಮಾಡಿ
ಉದಾಹರಣೆಗೆ ಈಗಾಗಲೇ ನೀವು PMFME ಯೋಜನೆಯ ಫಲಾನುಭವಿಗಳಾಗಿದ್ದು,ನಿಮ್ಮ ಸಾಲದ ಮೇಲೆ 3% ಬಡ್ಡಿ ಸಬ್ಸಿಡಿ ಪಡೆಯಬಹುದು

ನಂತರ ನಿಮ್ಮ ಹೆಸರು, ಮೊಬೈಲ್ ನಂಬರ್, ಆಧಾರ್ ನಂಬರ್ ಹಾಕಿ Send OTP ಮೇಲೆ ಕ್ಲಿಕ್ ಮಾಡಿ,ಮೊಬೈಲ್ ಗೆ ಬರುವ OTP ಹಾಕಿ Register ಮಾಡಿ

ನಿಮ್ಮ ಮೊಬೈಲ್ ಗೆ ID ಮತ್ತು password ಬರುತ್ತದೆ,ಅದನ್ನು ಹಾಕಿ ಲಾಗಿನ್ ಮಾಡಿ

ನಂತರ setting icon ಮೇಲೆ ಕ್ಲಿಕ್ ಮಾಡಿ Apply for interest subvention under other scheme ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಮಾಹಿತಿ ತುಂಬಿ,ನಿಮ್ಮ ಬ್ಯಾಂಕ್ ನ ಲೋನ್ Saction letter ಹಾಗೂ ಯೋಜನಾ ವರದಿಯನ್ನು ಅಪ್ಲೌಡ್ ಮಾಡಿ,Submit ಮೇಲೆ ಕ್ಲಿಕ್ ಮಾಡಿ


CPMU, ಕೃಷಿ ಮತ್ತು ರೈ ಕಲ್ಯಾಣ ಮಂತ್ರಾಲಯದ ಮೂಲಕ ಪರಿಶೀಲಿಸಲಾದ ಅರ್ಜಿಯನ್ನು ಬ್ಯಾಂಕ್‌ ಶಾಖೆಗೆ ಆನ್‌ ಲೈನ್‌ ನಲ್ಲಿ ವರ್ಗಾಯಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕೃಷಿ/ತೋಟಗಾರಿಕೆ ಇಲಾಖೆ, ಜಿಲ್ಲಾ ನಬಾರ್ಡ್‌ ವ್ಯವಸ್ಥಾಪಕರು, ನಿಮ್ಮ ವ್ಯಾಪ್ತಿಯ ಬ್ಯಾಂಕ್/‌ ಹಣಕಾಸು ಸಂಸ್ಥೆಗಳನ್ನು ಸಂಪರ್ಕಿಸಬಹುದು.

]]>
Sat, 01 Mar 2025 14:24:02 +0530 shivuagrico
Gruhalakshmi payment status&ಕೊನೆಗೂ 3 ತಿಂಗಳ ನಂತರ ಗೃಹಲಕ್ಷ್ಮಿ ಹಣ ಒಟ್ಟಿಗೆ ಜಮಾ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Gruhalakshmi-payment-status-1904 https://krushirushi.in/Gruhalakshmi-payment-status-1904 Gruhalakshmi payment status-ಕೊನೆಗೂ 3 ತಿಂಗಳ ನಂತರ ಗೃಹಲಕ್ಷ್ಮಿ ಹಣ ಒಟ್ಟಿಗೆ ಜಮಾ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ಇಂದಿನಿಂದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Fri, 28 Feb 2025 22:10:19 +0530 shivuagrico
Gruhalakshmi list&ಈ ಪಟ್ಟಿಯಲ್ಲಿರುವವರಿಗೆ ಈ ದಿನ ಒಟ್ಟಿಗೆ ಜಮಾ ಆಗಲಿದೆ 3 ತಿಂಗಳ ಗೃಹಲಕ್ಷ್ಮಿ ಅನ್ನಭಾಗ್ಯ ಹಣ https://krushirushi.in/Gruhalakshmi-list-1903 https://krushirushi.in/Gruhalakshmi-list-1903 Gruhalakshmi list-ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಗಲಿದೆ 3 ತಿಂಗಳ ಗೃಹಲಕ್ಷ್ಮಿ ಅನ್ನಭಾಗ್ಯ ಹಣ

ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Fri, 28 Feb 2025 18:46:24 +0530 shivuagrico
Male nakshatragalu&2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು https://krushirushi.in/Male-nakshatragalu-2025-1902 https://krushirushi.in/Male-nakshatragalu-2025-1902 Male nakshatragalu-2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು


2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-14-4-2025

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-28-4-2025

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2025

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-25-5-2025

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-6-7-2025

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-20-7-2025

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-31-8-2025

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2025

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-27-9-2025

ಉತ್ತಮ ಮಳೆ

14.ಚಿತ್ತ

ದಿನಾಂಕ-11-10-2025

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-24-10-2025

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2025

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs  ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in  website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.     

https://krushirushi.in/contact-us


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ

]]>
Fri, 28 Feb 2025 06:43:42 +0530 shivuagrico
Bele parihara list&ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ,ನಿಮಗೇಷ್ಟು ಜಮಾ ಚೆಕ್ ಮಾಡಿ https://krushirushi.in/Bele-parihara-list-1901 https://krushirushi.in/Bele-parihara-list-1901 Bele parihara-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

 

]]>
Thu, 27 Feb 2025 19:17:56 +0530 shivuagrico
Free Aadhar update last date&ಉಚಿತ ಆಧಾರ್ ಅಪ್ಡೇಟ್ ಗೆ ಕೊನೆಯ ದಿನಾಂಕ,ಇಲ್ಲದಿದ್ದರೆ ದಂಡ ಫಿಕ್ಸ್,ಹೀಗೆ ಮಾಡಿ ನಿಮ್ಮ ಆಧಾರ್ ಅಪ್ಡೇಟ್ https://krushirushi.in/Free-Aadhar-update-last-date-1900 https://krushirushi.in/Free-Aadhar-update-last-date-1900 Free Aadhar update last date-ಉಚಿತ ಆಧಾರ್ ಅಪ್ಡೇಟ್ ಗೆ ಕೊನೆಯ ದಿನಾಂಕ,ಇಲ್ಲದಿದ್ದರೆ ದಂಡ ಫಿಕ್ಸ್,ಹೀಗೆ ಮಾಡಿ ನಿಮ್ಮ ಆಧಾರ್ ಅಪ್ಡೇಟ್

ಈ ಮೊದಲು ಆಧಾರ್​ಗೆ ಸಂಬಂಧಿತ ಮಾಹಿತಿ ಅಪ್​ಲೋಡ್​ ಮಾಡಿಕೊಳ್ಳಲು ಈ ಮೊದಲು ಡಿಸೆಂಬರ್ 14 ಕೊನೆಯ ದಿನವಾಗಿತ್ತು, ಈಗ ಜೂನ್ 14ರವರೆಗೆ ಅವಧಿ ವಿಸ್ತರಿಸಲಾಗಿದ್ದು,ಆನ್​ಲೈನ್​ನಲ್ಲಿ ಉಚಿತವಾಗಿ ಆಧಾರ್​ ಅಪ್​ಡೇಟ್​ ಮಾಡಿಕೊಳ್ಳಿ

ನೀವು ಆಧಾರ್​ ಸಂಖ್ಯೆ ಪಡೆದು ಹತ್ತು ವರ್ಷಗಳಾಗಿದ್ದಲ್ಲಿ ಹಾಗೂ ಇದುವರೆಗೂ ಯಾವುದೇ ಮಾಹಿತಿ ಅಪ್​ಡೇಟ್ ಮಾಡಿಕೊಂಡಿರದಿದ್ದಲ್ಲಿ ಈ ಅವಕಾಶವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಅಂದಹಾಗೆ ಇದು ಡೆಮೊಗ್ರಫಿಕ್​ ಡೇಟಾಗಷ್ಟೇ ಸೀಮಿತವಾಗಿರಲಿದೆ ಎಂದು ಯುಐಡಿಎಐ ತಿಳಿಸಿದೆ.

ಈ ಅಪ್​ಡೇಟ್​ಗೆ ಆಧಾರ್​ ಗ್ರಾಹಕ ಸೇವಾ ಕೇಂದ್ರದಲ್ಲಿ 50 ರೂ. ಶುಲ್ಕ ವಿಧಿಸಲಾಗುತ್ತಿದೆ. ಆದರೆ ಆನ್​ಲೈನ್​ನಲ್ಲಿ ಉಚಿತವಾಗಿ ಮಾಡಿಕೊಳ್ಳಲು ಅವಕಾಶವಿದ್ದು,ಹತ್ತು ವರ್ಷಗಳ ಹಿಂದೆ ಆಧಾರ್​ ಪಡೆದವರು ತಮ್ಮ ಇತ್ತೀಚಿಗಿನ ಗುರುತು, ವಾಸದ ವಿಳಾಸ ಇತ್ಯಾದಿ ಮಾಹಿತಿಗಳನ್ನು ಜೂನ್ 14ರ ಒಳಗೆ ಉಚಿತವಾಗಿ ಅಪ್​​ಡೇಟ್ ಮಾಡಿಕೊಳ್ಳಬಹುದು.

ಅಲ್ಲದೆ ಡೆಮೊಗ್ರಫಿಕ್ ಡೇಟಾ ಅಂದರೆ, ಹೆಸರು, ವಿಳಾಸ, ಜನ್ಮದಿನಾಂಕ, ಲಿಂಗ, ಮೊಬೈಲ್​ಫೋನ್​ ನಂಬರ್, ಇ-ಮೇಲ್ ಐಡಿ ವಿವರಗಳನ್ನು ಅಪ್​ಡೇಟ್ ಮಾಡಿಕೊಳ್ಳಬಹುದು.

Free Aadhaar update-ಉಚಿತವಾಗಿ ಆಧಾರ್ ಅಪ್ಡೇಟ್ ಮಾಡುವ ಡೈರೆಕ್ಟ್ ಲಿಂಕ್

https://myaadhaar.uidai.gov.in/

ಮೊದಲು ಮುಖಪುಟದಲ್ಲಿರುವ login ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,Captcha type ಮಾಡಿ, send OTP ಮೇಲೆ ಕ್ಲಿಕ್ ಮಾಡಿ

ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Login ಮೇಲೆ ಕ್ಲಿಕ್ ಮಾಡಿ

ನಂತರ Document update ಮೇಲೆ ಕ್ಲಿಕ್ ಮಾಡಿ

ನಂತರ Next ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ Next ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ Next ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ POI ಅಂದರೆ ನಿಮ್ಮ ಗುರುತಿನ ಚೀಟಿಯಾಗಿ ಪ್ಯಾನ್ ಕಾರ್ಡ್ ಅಥವಾ ಯಾವುದಾದರು ಗುರುತಿನ ಚೀಟಿಯನ್ನು ಹಾಗೂ POA ಅಂದರೆ ನಿಮ್ಮ ವಿಳಾಸದ ಪುರಾವೆಯನ್ನು select ಮಾಡಿ ನಿಮ್ಮ passport ಅಥವಾ ಯಾವುದಾದರೂ ವಿಳಾಸದ ಪುರಾವೆಯ ಫೋಟೊವನ್ನು ಅಪ್ಲೋಡ್ ಮಾಡಿ,Next ಮೇಲೆ ಕ್ಲಿಕ್ ಮಾಡಿ

ಸೂಚನೆ:ನೀವು ಅಪ್ಲೋಡ್ ಮಾಡುವ ಫೋಟೊ 2MB ಗಿಂತ ಮೇಲೆ ಇರಬೇಕು.

ನಂತರ Okay ಮೇಲೆ ಕ್ಲಿಕ್ ಮಾಡಿ

ನಂತರ submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ಅಪ್ಡೇಟ್ ಆಗಿ,Success ಎಂದು ತೋರಿಸುತ್ತದೆ.

ನಂತರ Download acknowledgment ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮಗೆ Acknowledgment ದೊರೆಯುತ್ತದೆ

]]>
Thu, 27 Feb 2025 13:18:09 +0530 shivuagrico
Aadhar not linked bele vime farmers list&ಆಧಾರ್ ಲಿಂಕ್ ಆಗದ ಬೆಳೆ ವಿಮೆ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆವಿಮೆ ಜಮಾ https://krushirushi.in/Aadhar-not-linked-bele-vime-farmers-list-1899 https://krushirushi.in/Aadhar-not-linked-bele-vime-farmers-list-1899 Aadhar not linked bele vime farmers list-ಆಧಾರ್ ಲಿಂಕ್ ಆಗದ ಬೆಳೆ ವಿಮೆ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆವಿಮೆ ಜಮಾ

ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/AadharNotSeededReport.aspx

ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿದರೆ ನಿಮಗೆ pdf download ಮಾಡಿಕೊಂಡು ನಿಮ್ಮ ಹೆಸರು ಚೆಕ್ ಮಾಡಿ

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732

]]>
Thu, 27 Feb 2025 02:27:15 +0530 shivuagrico
Gruhajyothi delink&ಮನೆ ಬದಲಾವಣೆ ಮಾಡಿದರೆ ಹಳೆ ಆರ್ ಆರ್ ನಂಬರ್ ಡಿಲಿಂಕ್ ಮಾಡಿ ಹೊಸ ಗೃಹಜ್ಯೋತಿ ಅರ್ಜಿ ಹಾಕುವ ಡೈರೆಕ್ಟ್ ಲಿಂಕ್ https://krushirushi.in/Gruhajyothi-delink-1898 https://krushirushi.in/Gruhajyothi-delink-1898 Gruhajyothi delink-ಮನೆ ಬದಲಾವಣೆ ಮಾಡಿದರೆ ಹಳೆ ಆರ್ ಆರ್ ನಂಬರ್ ಡಿಲಿಂಕ್ ಮಾಡಿ ಹೊಸ ಗೃಹಜ್ಯೋತಿ ಅರ್ಜಿ ಹಾಕುವ ಡೈರೆಕ್ಟ್ ಲಿಂಕ್


ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿಯು ಜಾರಿಯಾಗಿ ಒಂದು ವರ್ಷ ಪೂರೈಸಿದೆ. ಇದೇ ಸಮಯದಲ್ಲಿ ಇಂಧನ ಇಲಾಖೆಯು ಗೃಹಜ್ಯೋತಿ ಗ್ರಾಹಕರಿಗಾಗಿ ಮನೆ ಬದಲಾಯಿಸಿದ ನಂತರವೂ ಉಚಿತ ವಿದ್ಯುತ್‌ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಿದೆ. 

ಹಳೆ ಮನೆಯ ಆರ್‌ಆರ್‌ ಸಂಖ್ಯೆಯನ್ನು ಡಿ-ಲಿಂಕ್‌ ಮಾಡಿ, ಹೊಸ ಮನೆಯ ಸಂಖ್ಯೆಯನ್ನು ಲಿಂಕ್‌ ಮಾಡುವ ಮೂಲಕ ಗೃಹಜ್ಯೋತಿ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. 

ಮೊದಲು ಸೇವಾ ಸಿಂಧು ಪೋರ್ಟಲ್‌ನ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://sevasindhu.karnataka.gov.in/GruhaJyothi_Delink/GetAadhaarData.aspx

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get details ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ, I agree ಮುಂದೆ ಟಿಕ್ ಮಾಡಿ,Mode of authentication OTP ಮೇಲೆ ಕ್ಲಿಕ್ ಮಾಡಿ, ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ Submit ಮೇಲೆ ಕ್ಲಿಕ್ ಮಾಡಿ

ನಂತರ ಡಿಲಿಂಕ್ ಗೆ ಕಾರಣವನ್ನು ಆಯ್ಕೆ ಮಾಡಿ,Declaration ಮುಂದೆ ಕ್ಲಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಡಿಲಿಂಕ್ ಅರ್ಜಿ ಯಶಸ್ವಿಯಾಗಿ Acknowledgment ಬರುತ್ತದೆ,ಅದನ್ನು ಡೌನ್ಲೊಡ್ ಮಾಡಿಕೊಳ್ಳಿ

ನಂತರ ಹೊಸದಾಗಿ ಗೃಹಜ್ಯೋತಿ ಗೆ ಅರ್ಜಿ ಹಾಕಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://krushirushi.in/Krushirushi-1000-547

]]>
Wed, 26 Feb 2025 21:30:13 +0530 shivuagrico
How to check Gruhalakshmi amount&ಮಹಾಶಿವರಾತ್ರಿಯ ದಿನವಾದ ಇಂದು ಗೃಹಿಣಿಯರ ಖಾತೆಗೆ ಗೃಹಲಕ್ಷ್ಮಿ ಹಣ ಜಮಾ https://krushirushi.in/How-to-check-Gruhalakshmi-amount-1897 https://krushirushi.in/How-to-check-Gruhalakshmi-amount-1897 How to check Gruhalakshmi amount-ಮಹಾಶಿವರಾತ್ರಿಯ ದಿನವಾದ ಇಂದು ಗೃಹಿಣಿಯರ ಖಾತೆಗೆ ಗೃಹಲಕ್ಷ್ಮಿ ಹಣ

ಮಹಾಶಿವರಾತ್ರಿಯ ದಿನದಂದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Wed, 26 Feb 2025 03:04:43 +0530 shivuagrico
Arecanut problem&ಅಡಿಕೆ ಬೆಳೆಗಾರರಿಗೆ ಇ&ವೇ ಬಿಲ್ ಪ್ರಹಾರ! ಏನೀದು ಇ&ವೇ ಬಿಲ್? https://krushirushi.in/Arecanut-problem-1896 https://krushirushi.in/Arecanut-problem-1896 Arecanut problem-ಅಡಿಕೆ ಬೆಳೆಗಾರರಿಗೆ ಇ-ವೇ ಬಿಲ್ ಪ್ರಹಾರ! ಏನೀದು ಇ-ವೇ ಬಿಲ್?

ಅಡಿಕೆ ವಹಿವಾಟಿನ ಮೇಲೆ ನಿಗಾ ಕೇಂದ್ರೀಕರಿಸಿರುವ ವಾಣಿಜ್ಯ ಇಲಾಖೆಯು ಅಡಿಕೆ ಬೆಳೆಗಾರರ ಮೇಲೆ ಮತ್ತೊಂದು ಅವೈಜ್ಞಾನಿಕ ತೂಗು ಕತ್ತಿ ಇಳಿ ಬಿಟ್ಟಿದೆ. ಅಡಿಕೆ ಬೆಳೆಗಾರರು ತಾವು ಬೆಳೆದ ಅಡಿಕೆಯನ್ನು ವಾಹನಗಳಲ್ಲಿ ಸಾಗಿಸಿ ಮಾರುಕಟ್ಟೆಗೆ ತರಬೇಕಾದರೆ, ಸಾಗಣೆ ಮಾಡುವ ಮೊದಲು ಆನ್‌ಲೈನಲ್ಲಿ ಇ-ವೇ ಬಿಲ್ (E-Way Bill) ನಮೂದಿಸುವುದು ಕಡ್ಡಾಯ ಮಾಡಲಾಗಿದೆ.

ಈ ಬಗ್ಗೆ ಸಾಮಾನ್ಯ ರೈತರಿಗೆ ಯಾವುದೇ ಮಾಹಿತಿ, ಅರಿವು ನೀಡದೆ ಕಾನೂನು ಜಾರಿ ಮಾಡಿರುವುದು ಅಡಿಕೆ ಬೆಳೆಗಾರರಲ್ಲಿ ಆತಂಕ ಮತ್ತು ಆಕ್ರೋಶ ಸೃಷ್ಟಿಸಿದೆ. ಕಡ್ಡಾಯ ನಿಯಮ ಮಾಡುವ ಮೊದಲು ಇ-ವೇ ಬಿಲ್ ಬಗ್ಗೆ ಒಂದು ಸ್ಪಷ್ಟ ಮಾಹಿತಿಗಳನ್ನು ಸಾಮಾನ್ಯ ರೈತರಿಗೆ ಕೊಡಬೇಕಲ್ವಾ? ಬಿಲ್ ಜನರೇಟ್ ಮಾಡುವುದು ಹೇಗೆ? ಎಲ್ಲಿ ಮಾಡುವುದು? ಲಿಂಕ್ ಯಾವುದು? ಏನೇನ್ ದಾಖಲೆಗಳನ್ನು ಫೀಡ್ ಮಾಡಬೇಕು?...... ಇತ್ಯಾದಿಗಳ ಒಂದು ಬೇಸಿಕ್ ಟ್ರೈನಿಂಗ್ ಮಾಹಿತಿಯ ಪ್ರಕಟಣೆಯನ್ನಾದರೂ ರೈತರಿಗೆ ಕೊಡಬೇಕಲ್ವಾ? ಎಂದು ರೈತರು ಪ್ರಶ್ನೆ ಮಾಡುತ್ತಿದ್ದಾರೆ.

ಇ-ವೇ ಬಿಲ್‌ನ ತಲೆ ಬುಡ ಗೊತ್ತಿಲ್ಲದ ರೈತರು ಏನು ಮಾಡಬೇಕು?

ಎಲ್ಲಾ ರೈತರ ಬಳಿ ಆಯಂಡ್ರಾಯ್ಡ್ ಫೋನ್ ಇದೆಯಾ? ಎಲ್ಲಾ ಕಡೆ ಇಂಟರ್‌ನೆಟ್ ಸೌಲಭ್ಯ ಇದೆಯಾ? ಮಂಗ, ಆನೆ, ಕಾಡುಕೋಣಗಳ ಹಾವಳಿಯ ನೆಟ್ವರ್ಕ್ ಬಿಟ್ರೆ ಎಂತಹ ನೆಟ್‌‌ವರ್ಕೂ ಮಲೆನಾಡಿನ ರಿಮೋಟ್ ಹಳ್ಳಿಗಳಲ್ಲಿ ಇಲ್ಲ. ರೈತರು ಏನು ಮಾಡಬೇಕು ಎನ್ನುವುದು ರೈತರು ಟವೆಲ್‌ನಲ್ಲಿ ಬೆವರು ಒರೆಸುತ್ತ ಕೇಳುವ ಪ್ರಶ್ನೆ.

ರಾತ್ರಿ ಹೊತ್ತು ವಾಣಿಜ್ಯ ಇಲಾಖೆಯವರು, ಗ್ರಾಮ ಪಂಚಾಯಿತಿಯವರು ಮಲಗಿದ ಮೇಲೆ, ಕಳ್ಳ ಮಾರ್ಗದಲ್ಲಿ ಮರಳು ಸಾಗಿಸುವ ಹಾಗೆ ರೈತರು ಕದ್ದು ಮುಚ್ಚಿ ಅಡಿಕೆ ಸಾಗಾಣಿಕೆ ಮಾಡಬೇಕಾ? ಪ್ರಾಮಾಣಿಕ ರೈತರೂ ಇನ್ನು ಮುಂದೆ ಕದ್ದು ಮುಚ್ಚಿ ವ್ಯವಹರಿಸಬೇಕಾ? ವಾಣಿಜ್ಯ ಇಲಾಖೆಯ ಭ್ರಷ್ಟ ಅಧಿಕಾರಿಗಳಿಗೆ ಮಾಮೂಲು ವಸೂಲಿಗೆ ರೈತರು ತಾವು ಬೆಳೆದ ಮೂರು ಕಾಸಿನ ಬೆಲೆಯೂ ಇಲ್ಲದಂತಾಗಿರುವ ಗೊರಬಲು ಅಡಿಕೆ, ಸಿಪ್ಪೆ ಗೋಟಿನ ಸಾಗಾಣಿಕೆಯಲ್ಲಿ ಪರ್ಸಂಟೇಜ್ ಎತ್ತಿಡಬೇಕಾ ಎಂದು ಆಕ್ರೋಶದಲ್ಲಿ ರಸ್ತೆ ತಿರುವಿನಲ್ಲಿ ರೈತರು ವಾಣಿಜ್ಯ ಅಧಿಕಾರಿಗಳೊಂದಿಗೆ ಪ್ರತಿಭಟನೆಯ ವಾಗ್ವಾದಕ್ಕಿಳಿದಿದ್ದಾರೆ.

ಸರಕಾರದ ಜನಪ್ರತಿನಿಧಿಗಳು, ಇಲಾಖಾ ಅಧಿಕಾರಿಗಳು ಹೊಟ್ಟೆಗೆ ಏನ್ ತಿಂತಿದಾರೆ, ಏನ್ ಕುಡಿತಿದಾರೆ?, ವಾಸ್ತವದ ಪ್ರಜ್ಞೆ ಇಲ್ವಾ? ಕಾಮನ್ ಸೆನ್ಸ್ ಇಲ್ಲದವರಾಗಿದ್ದಾರಾ? ಮೂರ್ಖರಾಗಿದ್ದಾರಾ ಎಂಬುದು ರೈತರ ಪ್ರಶ್ನೆ. ವಿದೇಶದಿಂದ ಕಳ್ಳ ದಾರಿಯಲ್ಲಿ ಕೋಟಿ ಕೋಟಿ ಮೌಲ್ಯದ ಅಡಿಕೆ ನಿತ್ಯ ಬರ್ತಾ ಇದೆ. ಅದಕ್ಕೆ ಯಾವ ಇ-ವೇ ಬಿಲ್ ನಿಯಂತ್ರಣ ಇಲ್ಲ. ಇಲ್ಲಿ ಬಡ ರೈತನ ಮೂರು ಮುಕ್ಕಾಲು ಕಾಸಿನ ಅಡಿಕೆಗೆ ಇ-ವೇ ಬಿಲ್ ಪ್ರಹಾರ ಯಾವ ನ್ಯಾಯ?

ಇ-ವೇ ಬಿಲ್ ವ್ಯವಸ್ಥೆ ತರುವುದು ಬೇಡ ಅಂತಲ್ಲ. ಮೊದಲು ಅದಕ್ಕೆ ಬೇಕಾಗುವ ಅಗತ್ಯ ಮಾಹಿತಿ ಹಂಚಿಕೆ, ಬೇಸಿಕ್ ತರಬೇತಿ, ಇಂಟರ್‌ನೆಟ್ ಸೌಲಭ್ಯ, ಕರೆಕ್ಟಾಗಿ ಚಾಲನೆಯಲ್ಲಿರುವ ಸರ್ವರ್ ಇವುಗಳನ್ನೆಲ್ಲ ಕೊಡಬೇಕಲ್ವಾ ಎಂಬುದು ರೈತರು ಸರಕಾರಕ್ಕೆ ಕೇಳುತ್ತಿರುವ ಪ್ರಶ್ನೆ.

ಒಟ್ಟಿನಲ್ಲಿ, ಸರಕಾರಗಳು ಮತ್ತೊಂದು ಆತಂಕದ ತೂಗುಕತ್ತಿಯನ್ನು ಅಡಿಕೆ ಬೆಳೆಗಾರರ ಮೇಲಿಟ್ಟು ಗೊಂದಲ, ವಿವಾದಗಳನ್ನು ನಿರ್ಮಿಸಿದೆ.‌ ರಸ್ತೆ ಬದಿ ಅಡಿಕೆ ತುಂಬಿದ ಗಾಡಿ ನಿಲ್ಲಿಸಿ, ಇ-ವೇ ಬಿಲ್ ಇಲ್ಲದ ರೈತರಿಂದ ಮಾಮೂಲಿ ವಸೂಲಿಯೂ ನಡೆಯುತ್ತಿದೆ.

ಬೇರೆ 'ದಾರಿ ಇಲ್ಲದೆ', ಮಾಮೂಲಿ ಕೊಟ್ಟ ಅಡಿಕೆ ಬೆಳೆಗಾರ, ಸರಕಾರಕ್ಕೆ, ವಸೂಲಿಗಿಳಿದ ದರಿದ್ರ ಅಧಿಕಾರಿಗಳಿಗೆ, ಎಸಿ ರೂಮಿನಲ್ಲಿ ನಿದ್ರೆಯಲ್ಲಿರುವ ಜನ ಪ್ರತಿನಿಧಿಗಳಿಗೆ ಹಿಡಿ ಶಾಪ ಹಾಕಿ, ಉರಿ ಬಿಸಿಲಿನಲ್ಲಿ ಗೊರಬಲು ಅಡಿಕೆ ಮೂಟೆಯೊಂದಿಗೆ ಮಾರುಕಟ್ಟೆಗೆ ಹೋಗಬೇಕಾಗಿದೆ.

]]>
Wed, 26 Feb 2025 02:45:26 +0530 shivuagrico
MSP for bilijola&ಕನಿಷ್ಟ ಬೆಂಬಲ ಯೋಜನೆಯಡಿ ಬಿಳಿಜೋಳ ಖರೀದಿ,ಮಾರಾಟ,ಹಣ ಪಾವತಿಯ ಸಂಪೂರ್ಣ ಮಾಹಿತಿ https://krushirushi.in/MSP-for-bilijola-1895 https://krushirushi.in/MSP-for-bilijola-1895 MSP for bilijola-ಕನಿಷ್ಟ ಬೆಂಬಲ ಯೋಜನೆಯಡಿ ಬಿಳಿಜೋಳ ಖರೀದಿ,ಮಾರಾಟ,ಹಣ ಪಾವತಿಯ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಆದೇಶ ಮಾಡಿದೆ.


ಜಿಲ್ಲಾ ಟಾಸ್ಕ್‌ಫೋರ್ಸ್‌ಗಳ ಶಿಫಾರಸ್ಸಿನಂತೆ ವಿಜಯಪುರ, ಕಲಬುರಗಿ, ಬಾಗಲಕೋಟೆ, ಯಾದಗಿರಿ, ಬೀದರ್‌, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಬೆಳಗಾವಿ, ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ.

ರೈತಬಾಂಧವರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಬಿಳಿಜೋಳವನ್ನು ಮಾರಾಟ ಮಾಡದೇ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಸರ್ಕಾರದ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.

ಬೆಂಬಲ ಬೆಲೆ ಎಷ್ಟು?

ಹೈಬ್ರಿಡ್ ಜೋಳ ರೂ.3,371/- (ಪ್ರತಿ ಕ್ವಿಂಟಾಲ್ ಗೆ)
ಮಾಲ್ದಂಡಿ ಜೋಳ ರೂ.3,421/- (ಪ್ರತಿ ಕ್ವಿಂಟಾಲ್ಗೆ)
ಪ್ರತಿ ಎಕರೆಗೆ ನಿಗದಿಪಡಿಸಿರುವ ಪ್ರಮಾಣ : 20 ಕ್ವಿಂಟಾಲ್
ಪ್ರತಿ ರೈತರಿಂದ ಖರೀದಿ ಪ್ರಮಾಣ : 150 ಕ್ವಿಂಟಾಲ್

ಮಾರಾಟ ಹೇಗೆ?

ಫೂಟ್ಸ್ ಐ.ಡಿ. ಯೊಂದಿಗೆ ಬಯೋಮೆಟ್ರಿಕ್ ನೀಡಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿ. ಅಧಾರ್ ಜೋಡಣೆಯಾದ ಎನ್.ಸಿ.ಪಿ.ಐ. ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಖಾತರಿಪಡಿಸಿ. ಎಫ್.ಎ.ಕ್ಕೂ ಗುಣಮಟ್ಟದ ಬಗ್ಗೆ ಗ್ರೇಡರ್ ಪರಿಶೀಲಿಸಿ ದೃಢೀಕರಿಸಿದ ನಂತರ ಖರೀದಿ.ಮದ್ಯವರ್ತಿಗಳು ಖರೀದಿ ಕೇಂದ್ರಗಳನ್ನು ದುರ್ಬಳಕೆ ಮಾಡಿಕೊಂಡರೆ ಕಾನೂನು ಕ್ರಮ ಜರುಗಿಸಲಾಗುವುದು.

ಹಣ ಪಾವತಿ ಹೇಗೆ?
ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ಹಣ ನೇರವಾಗಿ ಜಮೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಉಚಿತ ದೂರವಾಣಿ ಸಂಖ್ಯೆಗೆ 1800 425 1552 ಕರೆ ಮಾಡಬಹುದಾಗಿದೆ.

]]>
Tue, 25 Feb 2025 16:18:33 +0530 shivuagrico
Gruhalakshmi list&ಮಹಾಶಿವರಾತ್ರಿಯಂದು ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಗಲಿದೆ 3 ತಿಂಗಳ ಗೃಹಲಕ್ಷ್ಮಿ ಹಣ https://krushirushi.in/Gruhalakshmi-list-1894 https://krushirushi.in/Gruhalakshmi-list-1894 Gruhalakshmi list-ಮಹಾಶಿವರಾತ್ರಿಯಂದು ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಗಲಿದೆ 3 ತಿಂಗಳ ಗೃಹಲಕ್ಷ್ಮಿ ಹಣ

ಮಹಾಶಿವರಾತ್ರಿಯ ದಿನದಂದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Tue, 25 Feb 2025 06:45:19 +0530 shivuagrico
Pmkisan 19th instalment amount deposit today&ಇಂದು ಪಿಎಂ ಕಿಸಾನ್ 19ನೇ ಕಂತು ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Pmkisan-19th-instalment-amount-deposit-today-1892 https://krushirushi.in/Pmkisan-19th-instalment-amount-deposit-today-1892 Pmkisan 19th instalment amount deposit today-ಇಂದು ಪಿಎಂ ಕಿಸಾನ್ 19ನೇ ಕಂತು ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರುವರಿ 24,ಸೋಮವಾರ ಪಿಎಂ-ಕಿಸಾನ್(pmkisan) ಯೋಜನೆಯಡಿ 19ನೇ ಕಂತಿನ ₹22 ಸಾವಿರ ಕೋಟಿ ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ. 9.8 ಕೋಟಿ ರೈತರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ವಾರ್ಷಿಕ ₹6 ಸಾವಿರ ನೀಡಲಾಗುತ್ತದೆ.

ಪ್ರತಿ ನಾಲ್ಕು ತಿಂಗಳಿಗೆ ಮೂರು ಬಾರಿ ರೈತರಿಗೆ ₹2 ಸಾವಿರವನ್ನು ನೇರವಾಗಿ(DBT)ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. 18ನೇ ಕಂತಿನಲ್ಲಿ 9.6 ಕೋಟಿ ಇದ್ದ ಫಲಾನುಭವಿಗಳ ಸಂಖ್ಯೆಯು ಈ ಬಾರಿ ಹೆಚ್ಚಳವಾಗಿದೆ. ಸದ್ಯ ಬಿಡುಗಡೆಯಾಗಿರುವ ಮೊತ್ತವು ಸೇರಿದರೆ ಇಲ್ಲಿಯವರೆಗೆ ಈ ಯೋಜನೆಯಡಿ ಬಿಡುಗಡೆಯಾಗಿರುವ ಮೊತ್ತ ₹3.68 ಲಕ್ಷ ಕೋಟಿಯಾಗಿದೆ ಎಂದು ತಿಳಿಸಿದೆ.


ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ-Pmkisan beneficiary status 

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/

ಮೊದಲು know your status ಮೇಲೆ ಕ್ಲಿಕ್ ಮಾಡಿ

ನಂತರ know your register number ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ

ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.

ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ

ನಂತರ update your details ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ

 Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.

ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ

Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.

FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ  ಕಾರಣ ಮತ್ತು ಪರಿಹಾರ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

fruitspmk.gov.in ಪೋರ್ಟಲ್ ನಲ್ಲಿ

1

ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ

ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು                                                                     ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು

ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ  (NIC)                     ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ.            ಆ) ಸಮಸ್ಯಾತ್ಮಕ  ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ.

2

ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು

ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ

ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ    ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ

3

ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು

 ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ

ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ   ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ

4

ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ

ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ

OPERATOR ಲಾಗಿನ್ (RSK, ADA office, JDA office)  OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು

5

01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ

ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ

ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ)

6

Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು

ಜಿಲ್ಲೆಗಳಲ್ಲಿ  OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ

AAO ಲಾಗಿನ್  (RSK, ADA office, JDA office)  AAO ಲಾಗಿನ್ನಲ್ಲಿ  ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ,  ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

7

ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ

ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ)

AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.

8

PFMS rejected

Aadhaar Number is not seeded in NPCI

ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ

Bank Name And IFSC Code are not related to each other

ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ

Bank Name is not as per PFMS Bank Master.

Beneficiary is rejected as Account Type is other than SB / SBA / JD

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ)

Duplicate Beneficiary Name , Bank Account No and Bank Name not allowed for same scheme

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

IFSC Code  either not present or currently inactive in tbl BankBranch

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

Incorrect Aadhaar Number

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

One or more mandatory tags values are missing.

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

Rejected by Bank, Account No does not exist in Bank/INVALID/CLOSED

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

9

Amount credited to Account Number-NA

Aadhaar number based payment by GoI

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ.

10

PAYMENT STOPPED BY STATE

 XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳಿದ್ದರೆ ಕೇಂದ್ರ ಕಚೇರಿ ಮಾಹಿತಿ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

11

Transaction failed

ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ.

12

ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ

OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳ   ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

13

ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು

ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ.

ಕೇಂದ್ರ ಸರ್ಕಾರ ದ   pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ.

]]>
Mon, 24 Feb 2025 06:16:19 +0530 shivuagrico
Pmkisan 19th instalment amount deposited&ನನ್ನ ಖಾತೆಗೆ ಪಿಎಂ ಕಿಸಾನ್ 19ನೇ ಕಂತಿನ 2000 ಹಣ ಜಮಾ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Pmkisan-19th-instalment-amount-deposited-1893 https://krushirushi.in/Pmkisan-19th-instalment-amount-deposited-1893 Pmkisan 19th instalment amount deposit today-ಇಂದು ಪಿಎಂ ಕಿಸಾನ್ 19ನೇ ಕಂತು ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರುವರಿ 24,ಸೋಮವಾರ ಪಿಎಂ-ಕಿಸಾನ್(pmkisan) ಯೋಜನೆಯಡಿ 19ನೇ ಕಂತಿನ ₹22 ಸಾವಿರ ಕೋಟಿ ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ. 9.8 ಕೋಟಿ ರೈತರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ವಾರ್ಷಿಕ ₹6 ಸಾವಿರ ನೀಡಲಾಗುತ್ತದೆ.

ಪ್ರತಿ ನಾಲ್ಕು ತಿಂಗಳಿಗೆ ಮೂರು ಬಾರಿ ರೈತರಿಗೆ ₹2 ಸಾವಿರವನ್ನು ನೇರವಾಗಿ(DBT)ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. 18ನೇ ಕಂತಿನಲ್ಲಿ 9.6 ಕೋಟಿ ಇದ್ದ ಫಲಾನುಭವಿಗಳ ಸಂಖ್ಯೆಯು ಈ ಬಾರಿ ಹೆಚ್ಚಳವಾಗಿದೆ. ಸದ್ಯ ಬಿಡುಗಡೆಯಾಗಿರುವ ಮೊತ್ತವು ಸೇರಿದರೆ ಇಲ್ಲಿಯವರೆಗೆ ಈ ಯೋಜನೆಯಡಿ ಬಿಡುಗಡೆಯಾಗಿರುವ ಮೊತ್ತ ₹3.68 ಲಕ್ಷ ಕೋಟಿಯಾಗಿದೆ ಎಂದು ತಿಳಿಸಿದೆ.


ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ-Pmkisan beneficiary status 

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/

ಮೊದಲು know your status ಮೇಲೆ ಕ್ಲಿಕ್ ಮಾಡಿ

ನಂತರ know your register number ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ

ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.

ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ

ನಂತರ update your details ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ

 Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.

ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ

Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.

FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ  ಕಾರಣ ಮತ್ತು ಪರಿಹಾರ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

fruitspmk.gov.in ಪೋರ್ಟಲ್ ನಲ್ಲಿ

1

ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ

ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು                                                                     ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು

ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ  (NIC)                     ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ.            ಆ) ಸಮಸ್ಯಾತ್ಮಕ  ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ.

2

ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು

ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ

ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ    ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ

3

ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು

 ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ

ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ   ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ

4

ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ

ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ

OPERATOR ಲಾಗಿನ್ (RSK, ADA office, JDA office)  OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು

5

01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ

ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ

ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ)

6

Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು

ಜಿಲ್ಲೆಗಳಲ್ಲಿ  OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ

AAO ಲಾಗಿನ್  (RSK, ADA office, JDA office)  AAO ಲಾಗಿನ್ನಲ್ಲಿ  ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ,  ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

7

ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ

ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ)

AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.

8

PFMS rejected

Aadhaar Number is not seeded in NPCI

ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ

Bank Name And IFSC Code are not related to each other

ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ

Bank Name is not as per PFMS Bank Master.

Beneficiary is rejected as Account Type is other than SB / SBA / JD

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ)

Duplicate Beneficiary Name , Bank Account No and Bank Name not allowed for same scheme

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

IFSC Code  either not present or currently inactive in tbl BankBranch

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

Incorrect Aadhaar Number

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

One or more mandatory tags values are missing.

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

Rejected by Bank, Account No does not exist in Bank/INVALID/CLOSED

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

9

Amount credited to Account Number-NA

Aadhaar number based payment by GoI

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ.

10

PAYMENT STOPPED BY STATE

 XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳಿದ್ದರೆ ಕೇಂದ್ರ ಕಚೇರಿ ಮಾಹಿತಿ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

11

Transaction failed

ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ.

12

ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ

OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳ   ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

13

ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು

ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ.

ಕೇಂದ್ರ ಸರ್ಕಾರ ದ   pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ.

]]>
Mon, 24 Feb 2025 06:15:48 +0530 shivuagrico
Pmkisan 19th instalment&ಇಂದು ಜಮಾ ಆಗಿದೆ ಈ ಪಟ್ಟಿಯಲ್ಲಿರುವವರಿಗೆ ಪಿಎಂ ಕಿಸಾನ್ 19ನೇ ಕಂತು https://krushirushi.in/Pmkisan-19th-instalment-1891 https://krushirushi.in/Pmkisan-19th-instalment-1891 Pmkisan 19th instalment-ನಾಳೆ ಜಮಾ ಆಗಲಿದೆ ಈ ಪಟ್ಟಿಯಲ್ಲಿರುವವರಿಗೆ ಪಿಎಂ ಕಿಸಾನ್ 19ನೇ ಕಂತು

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರುವರಿ 24,ಸೋಮವಾರ ಪಿಎಂ-ಕಿಸಾನ್(pmkisan) ಯೋಜನೆಯಡಿ 19ನೇ ಕಂತಿನ ₹22 ಸಾವಿರ ಕೋಟಿ ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ. 9.8 ಕೋಟಿ ರೈತರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ವಾರ್ಷಿಕ ₹6 ಸಾವಿರ ನೀಡಲಾಗುತ್ತದೆ.

ಪ್ರತಿ ನಾಲ್ಕು ತಿಂಗಳಿಗೆ ಮೂರು ಬಾರಿ ರೈತರಿಗೆ ₹2 ಸಾವಿರವನ್ನು ನೇರವಾಗಿ(DBT)ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. 18ನೇ ಕಂತಿನಲ್ಲಿ 9.6 ಕೋಟಿ ಇದ್ದ ಫಲಾನುಭವಿಗಳ ಸಂಖ್ಯೆಯು ಈ ಬಾರಿ ಹೆಚ್ಚಳವಾಗಿದೆ. ಸದ್ಯ ಬಿಡುಗಡೆಯಾಗಿರುವ ಮೊತ್ತವು ಸೇರಿದರೆ ಇಲ್ಲಿಯವರೆಗೆ ಈ ಯೋಜನೆಯಡಿ ಬಿಡುಗಡೆಯಾಗಿರುವ ಮೊತ್ತ ₹3.68 ಲಕ್ಷ ಕೋಟಿಯಾಗಿದೆ ಎಂದು ತಿಳಿಸಿದೆ.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732

]]>
Sun, 23 Feb 2025 19:24:59 +0530 shivuagrico
Gruhalakshmi list&ಇನ್ನೊಂದು ವಾರದಲ್ಲಿ ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಗಲಿದೆ 3 ತಿಂಗಳ ಗೃಹಲಕ್ಷ್ಮಿ ಅನ್ನಭಾಗ್ಯ ಹಣ https://krushirushi.in/Gruhalakshmi-list-1890 https://krushirushi.in/Gruhalakshmi-list-1890 Gruhalakshmi list-ಈ ಪಟ್ಟಿಯಲ್ಲಿರುವವರಿಗೆ ಒಟ್ಟಿಗೆ ಜಮಾ ಆಗಲಿದೆ 3 ತಿಂಗಳ ಗೃಹಲಕ್ಷ್ಮಿ ಅನ್ನಭಾಗ್ಯ ಹಣ

ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

]]>
Sun, 23 Feb 2025 06:17:08 +0530 shivuagrico
Belevime&25.03 ಲಕ್ಷ ರೈತರಿಗೆ 2019.69 ಕೋಟಿ ಬೆಳೆವಿಮೆ ಪರಿಹಾರ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ https://krushirushi.in/Belevime-1889 https://krushirushi.in/Belevime-1889 Belevime-25.03 ಲಕ್ಷ ರೈತರಿಗೆ 2019.69 ಕೋಟಿ ಬೆಳೆವಿಮೆ ಪರಿಹಾರ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಕರ್ನಾಟಕ ರೈತ ಸುರಕ್ಷಾ - ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ(Pardan mantri fasal Bheema Yojana)
2023-24: 25.03 ಲಕ್ಷ ರೈತರು 20.53 ಲಕ್ಷ ಹೆಕ್ಟೇರ್‌ನಲ್ಲಿ ನೋಂದಾಯಿಸಿ, ₹2019.69 ಕೋಟಿ ಪರಿಹಾರ ಪಡೆದಿದ್ದಾರೆ!
ಹಿಂದಿನ ವರ್ಷಗಳಲ್ಲಿ 22,572 ರೈತರಿಗೆ ₹286.89 ಕೋಟಿ ಪರಿಹಾರ ನೀಡಲಾಗಿದೆ.

ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Sat, 22 Feb 2025 17:27:19 +0530 shivuagrico
Pmkisan 19th instalment beneficiary list&ಪಿಎಂ ಕಿಸಾನ್ 19ನೇ ಕಂತಿನ ಫಲಾನುಭವಿಗಳ ಸಂಖ್ಯೆಯಲ್ಲಿ ಹೆಚ್ಚಳ,ಯಾರಿಗೆಲ್ಲಾ ಸಿಗಲಿದೆ 19ನೇ ಕಂತು https://krushirushi.in/Pmkisan-19th-instalment-beneficiary-list-1888 https://krushirushi.in/Pmkisan-19th-instalment-beneficiary-list-1888 Pmkisan 19th instalment beneficiary list-9.7 ಕೋಟಿ ರೈತರಿಗೆ 22 ಸಾವಿರ ಕೋಟಿ ಪಿಎಂ ಕಿಸಾನ್ 19ನೇ ಕಂತು

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರುವರಿ 24,ಸೋಮವಾರ ಪಿಎಂ-ಕಿಸಾನ್(pmkisan) ಯೋಜನೆಯಡಿ 19ನೇ ಕಂತಿನ ₹22 ಸಾವಿರ ಕೋಟಿ ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ. 9.8 ಕೋಟಿ ರೈತರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ವಾರ್ಷಿಕ ₹6 ಸಾವಿರ ನೀಡಲಾಗುತ್ತದೆ.

ಪ್ರತಿ ನಾಲ್ಕು ತಿಂಗಳಿಗೆ ಮೂರು ಬಾರಿ ರೈತರಿಗೆ ₹2 ಸಾವಿರವನ್ನು ನೇರವಾಗಿ(DBT)ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. 18ನೇ ಕಂತಿನಲ್ಲಿ 9.6 ಕೋಟಿ ಇದ್ದ ಫಲಾನುಭವಿಗಳ ಸಂಖ್ಯೆಯು ಈ ಬಾರಿ ಹೆಚ್ಚಳವಾಗಿದೆ. ಸದ್ಯ ಬಿಡುಗಡೆಯಾಗಿರುವ ಮೊತ್ತವು ಸೇರಿದರೆ ಇಲ್ಲಿಯವರೆಗೆ ಈ ಯೋಜನೆಯಡಿ ಬಿಡುಗಡೆಯಾಗಿರುವ ಮೊತ್ತ ₹3.68 ಲಕ್ಷ ಕೋಟಿಯಾಗಿದೆ ಎಂದು ತಿಳಿಸಿದೆ.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732

]]>
Sat, 22 Feb 2025 11:52:23 +0530 shivuagrico
Annabhagya list&ಇನ್ನು ಮುಂದೆ ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 10 ಕೆಜಿ ಅನ್ನಭಾಗ್ಯ ಅಕ್ಕಿ https://krushirushi.in/Annabhagya-list-1887 https://krushirushi.in/Annabhagya-list-1887 Annabhagya list-ಇನ್ನು ಮುಂದೆ ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 10 ಕೆಜಿ ಅನ್ನಭಾಗ್ಯ ಅಕ್ಕಿ

ಅನ್ನಭಾಗ್ಯ ಯೋಜನೆಯಡಿ ಪಡಿತರ ಫಲಾನುಭವಿಗಳಿಗೆ ನೀಡುತ್ತಿರುವ ನೇರ ನಗದು ವರ್ಗಾವಣೆ ಯೋಜನೆಯಡಿ ನೀಡುತ್ತಿರುವ ಹಣದ ಬದಲಾಗಿ 5 ಕೆಜಿ ಅಕ್ಕಿಯನ್ನು ಇನ್ಮುಂದೆ ವಿತರಿಸುವುದಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ.

ಈ ಬಗ್ಗೆ ಆಹಾರ, ನಾಗರರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 05 ಕೆ.ಜಿ, ಆಹಾರ ಧಾನದೊಂದಿಗೆ, ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 05 ಕೆ.ಜಿ, ಆಹಾರ ಧಾನ್ಯವನ್ನು ಸೇರಿಸಿ, ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆ.ಜಿ, ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿರುತ್ತದೆ ಎಂದಿದ್ದಾರೆ.


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 10ಕೆಜಿ ಅನ್ನಭಾಗ್ಯ ಅಕ್ಕಿ(Annabhagya)

]]>
Sat, 22 Feb 2025 06:29:15 +0530 shivuagrico