ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ(poultry), ಕುರಿ(Sheep), ಮೇಕೆ(goat), ಹಂದಿ ಸಾಕಾಣಿಕೆ ಮತ್ತು ರಸಮೇವು(Silage) ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.
National livestock mission
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ
(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)
ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ (Kisan credit card)ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.
ಅವಶ್ಯಕ ದಾಖಲಾತಿಗಳು :-
1)ಆಧಾರ,
2)ಪಹಣಿ ಪತ್ರ
3)ಬ್ಯಾಂಕ್ಖಾತೆ ಸಂಖ್ಯೆ,
ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು
4)ಭಾವ ಚಿತ್ರ.
ಕ್ರ.ಸಂ |
ಘಟಕ |
ಸೌಲಭ್ಯಗಳ ವಿವರ |
|
ಹೈನುಗಾರಿಕೆ |
|
1 |
ಮಿಶ್ರತಳಿ ದನಗಳ ನಿರ್ವಹಣೆ (1+1) |
ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ |
|
ಆ. ಸುಧಾರಿತ ಎಮ್ಮೆಗಳ ನಿರ್ವಹಣೆ |
ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ |
|
ಕುರಿ ಸಾಕಾಣಿಕೆ |
|
2 |
ಕುರಿಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ |
|
ಕುರಿಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (10) |
ರೂ. 13,000 ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (20) |
ರೂ. 26,000 ರಂತೆ ಸಾಲ ಸೌಲಭ್ಯ |
|
ಮೇಕೆ ಸಾಕಾಣಿಕೆ |
|
3 |
ಮೇಕೆಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ |
|
ಮೇಕೆಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ |
4 |
ಹಂದಿ ಸಾಕಾಣಿಕೆ (10) |
ರೂ,60,000 ರಂತೆ ಸಾಲ ಸೌಲಭ್ಯ |
|
ಕೋಳಿ ಸಾಕಾಣಿಕೆ |
|
5 |
ಮಾಂಸದ ಕೋಳಿ ಸಾಕಾಣಿಕೆ |
2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ |
|
ಮೊಟ್ಟೆ ಕೋಳಿ ಸಾಕಾಣಿಕೆ |
1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ |
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.
Vetarnary department subsidy schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಹಾಲು ಉತ್ಪಾದಕರಿಗೆ ಪ್ರೋತ್ಸಾಹ(Milk incentive)
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ಲಸಿಕಾ ಕಾರ್ಯಕ್ರಮ(Vaccination program)
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ(Back yard poultry)
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 20ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 20th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದ ಈ ಜಿಲ್ಲೆಗಳಲ್ಲಿ ಏ.29 ರವರೆಗೂ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು ಹಾಗೂ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಕಲಬುರಗಿ ಜಿಲ್ಲೆಯಲ್ಲಿ ಇಂದು ಭಾರಿ ಮಳೆಯಾಗಲಿದೆ.
ನಾಳೆ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ತುಮಕೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ.
ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ, ದಾವಣಗೆರೆ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಏ.29 ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಹಾಸನ, ಮೈಸೂರು, ಕೊಡಗು, ತುಮಕೂರು, ಮಂಡ್ಯ, ಚಿಕ್ಕಮಂಗಳೂರು, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ಚಿಕ್ಕಬಳ್ಳಾಪುರದಲ್ಲಿ ಏ.29 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕಾಸರಗೋಡು ತನಕವೂ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿಯ ಗಾಳಿಯ ಒತ್ತಡ ಹೆಚ್ಚಿದ್ದರೆ ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯ ಸಾಧ್ಯತೆಗಳವೆ.
ಈಗಿನಂತೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಪ್ರಿಲ್ 27ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 27ರ ನಂತರ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಅಲ್ಲಿಯತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಕೊಪ್ಪಳ, ಹಾವೇರಿ ಜಿಲ್ಲೆಯಲ್ಲೂ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಅನಿರೀಕ್ಷಿತ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಎಪ್ರಿಲ್ 27ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
]]>ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಕೂಡಲೇ ಜನರ ಖಾತೆಗೆ ಜಮೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬುದು ನನ್ನ ಗಮನದಲ್ಲಿದೆ.3 ತಿಂಗಳ ಹಣ ಒಟ್ಟಿಗೆ ಜಮಾ ಮಾಡಲಿದ್ದೇವೆ ಎಂದು ತಿಳಿಸಿದರು.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
2023ರ ಮುಂಗಾರು ಹಂಗಾಮಿನಲ್ಲಿ ತೊಗರಿ ನೆಟೆರೋಗದಿಂದ ನಷ್ಟಗೊಂಡ ರಾಜ್ಯದ ರೈತರಿಗೆ ಸರ್ಕಾರವು ₹233 ಕೋಟಿ ಪರಿಹಾರ ವಿತರಿಸಿದೆ. ಕಲಬುರಗಿ, ಯಾದಗಿರಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ರೈತರಿಗೆ ಈ ಸಹಾಯ ಲಭ್ಯವಾಗಿದ್ದು, ಕೃಷಿ ಚಟುವಟಿಕೆ ಪುನಶ್ಚೇತನಗೊಳ್ಳಲು ಇದು ಮಹತ್ವದ ಹೆಜ್ಜೆಯಾಗಿದೆ.
ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)
1.ಅಶ್ವಿನಿ-
ದಿನಾಂಕ-14-4-2025
ಸಾಮಾನ್ಯ ಮಳೆ
ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,
2.ಭರಣಿ
ದಿನಾಂಕ-28-4-2025
ಸಾಮಾನ್ಯ ಮಳೆ
ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು
3.ಕೃತಿಕಾ
ದಿನಾಂಕ-11-5-2025
ಸಾಮಾನ್ಯ ಮಳೆ
ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು
4.ರೋಹಿಣಿ-
ದಿನಾಂಕ-25-5-2025
ಉತ್ತಮ ಮಳೆ
ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು
5.ಮೃಗಶಿರ
ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ
ಉತ್ತಮ ಮಳೆ
ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು
6.ಆರಿದ್ರಾ
ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)
ಉತ್ತಮ ಮಳೆ
ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.
7.ಪುನರ್ವಸು
ದಿನಾಂಕ-6-7-2025
ಉತ್ತಮ ಮಳೆ
ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು.
8.ಪುಷ್ಯ
ದಿನಾಂಕ-20-7-2025
ಉತ್ತಮ ಮಳೆ
ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ) ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.
9.ಆಶ್ಲೇಷ
ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ
ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು
10.ಮಘ
ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ
ಉತ್ತಮ ಮಳೆ
ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.
11.ಹುಬ್ಬ
ದಿನಾಂಕ-31-8-2025
ಉತ್ತಮ ಮಳೆ
ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ. ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ
12.ಉತ್ತರ
ದಿನಾಂಕ-13-09-2025
ಉತ್ತಮ ಮಳೆ
ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ
13.ಹಸ್ತ
ದಿನಾಂಕ-27-9-2025
ಉತ್ತಮ ಮಳೆ
14.ಚಿತ್ತ
ದಿನಾಂಕ-11-10-2025
ಉತ್ತಮ ಮಳೆ
ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.
15.ಸ್ವಾತಿ
ದಿನಾಂಕ-24-10-2025
ಉತ್ತಮ ಮಳೆ
ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.
16.ವಿಶಾಖ
ದಿನಾಂಕ-6-11-2025
ಉತ್ತಮ ಮಳೆ
ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.
ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.
https://krushirushi.in/contact-us
ಇಂತಿ ನಿಮ್ಮ
ಶಿವನಗೌಡ ಪಾಟೀಲ
M.Sc(ಕೃಷಿ), ಕೀಟಶಾಸ್ತ್ರ
]]>
ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.
ಏನಿದು ಫ್ರೂಟ್ಸ್ ನಂಬರ್
ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.
ನಿಮ್ಮ FID ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.
ಏಕೆ ನೋಂದಾಯಿಸಬೇಕು?
ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್ ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ
ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.
ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.
ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು
]]>ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್(Survey number) ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.
ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ(Bele sala) ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.
ಸಾಲ(crop loan status)ವಿವರ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು
https://landrecords.karnataka.gov.in/Service2/
ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ.
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಇದನ್ನೂ ಓದಿ
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427
ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ. ಎಂಬ ಮಾಹಿತಿ ಇರುತ್ತದೆ.
ಈ ಮಾಹಿತಿ ರೈತರಿಗೆ ತುಂಬಾ ಅನುಕೂಲವಾಗಿದೆ ಸರ್ವೇ ನಂಬರ್ ನಮೂದಿಸಿದರೆ ಸಾಕು ರೈತರು ದೇಶದ ಯಾವುದೇ ಮೂಲೆಯಿಂದಲೂ ಮಾಹಿತಿ ಪಡೆಯಬಹುದು. ಕೇವಲ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವ ಮಾಹಿತಿ ಎಲ್ಲವೂ ರೈತರಿಗೆ ಸಿಗಲಿದೆ.
ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದ್ದು, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಕಲ್ಲು ಜಿಲ್ಲೆಯ ಕೆಲವು ಕಡೆ ಗುಡಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಉತ್ತರಗಳ ನಾಡಿನ ಅನೇಕ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ.
]]>ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಡಿಸೆಂಬರ್ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಯೋಜನೆಗಳ ಪಟ್ಟಿ ದೊರೆಯಲಿದೆ, ಅದರಲ್ಲಿ ನಿಮಗೆ ಬೇಕಾದ ಯೋಜನೆಯ ಮೇಲೆ ಕ್ಲಿಕ್ ಮಾಡಿ
ಉದಾಹರಣೆಗೆ ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿ(Gruhalakahmi)
ಈ ಕೆಳಗಿನಂತೆ ಇಲ್ಲಿಯವರೆಗೂ ಹಣ ಜಮಾ ಆಗಿರುವ ಮಾಹಿತಿ ತೋರಿಸುತ್ತದೆ.
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದ್ದು, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಕಲ್ಲು ಜಿಲ್ಲೆಯ ಕೆಲವು ಕಡೆ ಗುಡಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಮತ್ತು ಉತ್ತರಗಳ ನಾಡಿನ ಅನೇಕ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಸೋಮವಾರ ಮತ್ತು ಮಂಗಳವಾರ 10ಕ್ಕೂ ಅಧಿಕ ಜಿಲ್ಲೆಗಳಿಗೆ ಯೆ ಲೆಅಲರ್ಟ್ ಘೋಷಿಸಲಾಗಿದೆ.
ಈಗಿನಂತೆ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗಿನ ಬಹುತೇಕ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಈಗಾಗಲೇ ಮೋಡ ವಾತಾವರಣ ಇದ್ದು, ಗದಗ, ಬಳ್ಳಾರಿ, ದಾವಣಗೆರೆ ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ.
ದಕ್ಷಿಣ ಒಳನಾಡಿನ ಮೈಸೂರು, ಬೆಂಗಳೂರು ಹಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ರಾಜ್ಯದ ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ನೀಡುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ್ದ, ಐದು ಗ್ಯಾರಂಟಿಗಳ ಪೈಕಿ ಪ್ರಮುಖವಾದ ಶಕ್ತಿ ಯೋಜನೆಗೆ ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಬಸ್ನಲ್ಲಿ ಪ್ರಯಾಣ ಮಾಡುವಾಗ ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ.
ಶಕ್ತಿ ಯೋಜನೆಯ ಲಾಭವನ್ನು ಇನ್ನಷ್ಟು ಸರಳವಾಗಿ ಪಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವ ನಿರ್ಧಾರ ಕೈಗೊಂಡಿದೆ. ಈ ಸ್ಮಾರ್ಟ್ ಕಾರ್ಡ್ನ್ನು ಎರಡು ತಿಂಗಳೊಳಗೆ ರಾಜ್ಯದ ಎಲ್ಲಾ ಅರ್ಹ ಮಹಿಳೆಯರಿಗೆ ಉಚಿತವಾಗಿ ನೀಡಲಾಗುವುದು. ಈಗಾಗಲೇ ಈ ಕುರಿತ ಕಡತ ಹಣಕಾಸು ಇಲಾಖೆಗೆ ಹೋಗಿದ್ದು, ಕೇವಲ ಅನುಮತಿಯ ಬಾಕಿಯಿದೆ. ಸಾರಿಗೆ ಇಲಾಖೆ ಟೆಂಡರ್ ಕರೆಯಲು ಸಿದ್ಧತೆ ಮಾಡಿಕೊಂಡಿದೆ.
ಸ್ಮಾರ್ಟ್ ಕಾರ್ಡ್ ಪಡೆಯಲು ಮಹಿಳೆಯರು 'ಗ್ರಾಮ ಒನ್' ಅಥವಾ 'ಬೆಂಗಳೂರು ಒನ್' ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕು. ಅಲ್ಲದೆ, ಸೇವಾಸಿಂಧು ವೆಬ್ಸೈಟ್ ಬಳಸಿ ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಿದ ನಂತರ ತಕ್ಷಣವೇ ಪ್ರಿಂಟ್ ಮಾಡಿದ ರಸೀದಿಯೇ ಸ್ಮಾರ್ಟ್ ಕಾರ್ಡ್ ಎಂದು ಪರಿಗಣಿಸಲಾಗುತ್ತದೆ. ಮಾಸಿಕ ಪಾಸ್ ಅಥವಾ ಕಾರ್ಡ್ ವಿತರಣೆ ಇಲ್ಲ. ಇದು ಶಾಶ್ವತ ಪಾಸ್ನಂತೆ ಕಾರ್ಯನಿರ್ವಹಿಸುತ್ತದೆ.
ಪ್ರಿಂಟ್ ಆದ ಮಾಹಿತಿಯುಳ್ಳ ದಾಖಲೆಯೇ ಸ್ಮಾರ್ಟ್ ಕಾರ್ಡ್ ಆಗಿರಲಿದೆ. ಮಾಸಿಕ ಪಾಸಿನಂತೆ ಪ್ರತ್ಯೇಕ ಪಾಸ್ ವಿತರಣೆ ಇರಲ್ಲ. ಅರ್ಜಿ ಸಲ್ಲಿಸಿದ ಕೂಡಲೇ ನೀಡಲಾಗುವ ಪ್ರಿಂಟ್ಔಟ್ ಅನ್ನು ಸ್ಮಾರ್ಟ್ ಕಾರ್ಡ್ ಎಂದು ಪರಿಗಣಿಸಲಾಗುತ್ತದೆ.ಸೇವಾಸಿಂಧು ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಆಧಾರ್ ಕಾರ್ಡ್ನ್ನು ದಾಖಲೆಯಾಗಿ ಪರಿಗಣಿಸಿ ರಾಜ್ಯದ ಮಹಿಳೆಯರಿಗೆ ಸ್ಮಾರ್ಟ್? ಕಾರ್ಡ್ ವಿತರಣೆ ಮಾಡಲಾಗತ್ತದೆ. ಸೇವಾಕೇಂದ್ರದಲ್ಲಿಯೇ ಸ್ಮಾರ್ಟ್ಕಾರ್ಡ್ ಪ್ರಿಂಟ್ ಹಾಕಲಾಗುತ್ತದೆ.
ಅಲ್ಲದೇ, ಈ ಸ್ಮಾರ್ಟ್ ಕಾರ್ಡ್ನ್ನು ಕೇವಲ ಕರ್ನಾಟಕದ ನಿವಾಸಿಗಳಿಗಷ್ಟೇ ನೀಡಲಾಗುತ್ತದೆ. ಆಧಾರ್ ಕಾರ್ಡ್ನ ವಿಳಾಸ ಕರ್ನಾಟಕದೊಳಗೇ ಇರಬೇಕಾಗಿದೆ. ಶಕ್ತಿ ಯೋಜನೆಯ ಲಾಭ ಪಡೆಯಲು ಕೆಲವರು ಆಧಾರ್ ವಿಳಾಸ ಬದಲಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಆದರೆ ವಿಳಾಸ ಬದಲಿಸಿ ಸ್ಮಾರ್ಟ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿದರೆ ಅದು ಅಂಗೀಕಾರವಾಗುವುದಿಲ್ಲ.
ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
https://sevasindhu.karnataka.gov.in/Sevasindhu/Kannada?ReturnUrl=%2F
ಮೊದಲು "ಹೊಸ ಬಳಕೆದಾರರು ಇಲ್ಲಿ ನೊಂದಾಯಿಸಿ" ಮೇಲೆ ಕ್ಲಿಕ್ ಮಾಡಿ
ಮೊದಲ ಬಾರಿ ಲಾಗಿನ್ ಆಗುತ್ತಿದ್ದರೆ,New user? Register here ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,captcha type ಮಾಡಿ,Next ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ Continue ಮೇಲೆ ಕ್ಲಿಕ್ ಮಾಡಿ
ನಂತರ Allow ಮೇಲೆ ಕ್ಲಿಕ್ ಮಾಡಿ
ನಂತರ ಇಮೇಲ್ ಐಡಿ ಅಥವಾ ಮೊಬೈಲ್ ನಂಬರ್ ಹಾಕಿ, ನಿಮಗೆ ಬೇಕಾದ Password ಹಾಕಿ, captcha ಟೈಪ್ ಮಾಡಿ, submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಸೇವಾ ಸಿಂಧು ಅಕೌಂಟ್ activate ಆಗುತ್ತದೆ. ನಂತರ login ಕ್ಲಿಕ್ ಮಾಡಿ.
ನಂತರ ನೊಂದಾಯಿತ ಬಳಕೆದಾರರು ಇಲ್ಲಿ ಲಾಗಿನ್ ಮಾಡಿ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಇಮೇಲ್ ಐಡಿ ಅಥವಾ ಮೊಬೈಲ್ ನಂಬರ್ ಹಾಕಿ, ಕ್ರಿಯೇಟ್ ಮಾಡಿದ ಪಾಸ್ವರ್ಡ್ ಹಾಕಿ ಕ್ಯಾಪ್ಚ ಟೈಪ್ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ
ನಂತರ Apply for services ಮೇಲೆ ಕ್ಲಿಕ್ ಮಾಡಿ
ನಂತರ view all available services ಮೇಲೆ ಕ್ಲಿಕ್ ಮಾಡಿದರೆ,758 ಸೇವೆಗಳು ದೊರೆಯುತ್ತವೆ.Search Box ನಲ್ಲಿ Shakthi bus pass ಎಂದು Type ಮಾಡಿ,ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ
ನಂತರ ಅರ್ಜಿ ನಮೂನೆ ತೆರೆಯುತ್ತದೆ ಅದರಲ್ಲಿ ಅರ್ಜಿದಾರರ ಮೊಬೈಲ್ ಸಂಖ್ಯೆ ಹಾಗೂ ಅರ್ಜಿ ಸಲ್ಲಿಸುವವರ ವಿವರಗಳನ್ನು ಭರ್ತಿ ಮಾಡಿ.
ನಂತರ ಕೆಳಗಿನ ಭಾಗದ ಘೋಷಣೆಯಲ್ಲಿ ಐ ಅಗ್ರಿ ಎಂಬ ಚೆಕ್ ಬಾಕ್ಸ್ ಮೇಲೆ ಚೆಕ್ ಮಾಡಿ.
ನಂತರ ವೆರಿಫಿಕೇಶನ್ ಕೋಡನ್ನು ನೋಂದಣಿ ಮಾಡಿ ಅರ್ಜಿಯನ್ನು ಸಲ್ಲಿಸಿ.
]]>ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ "2016-17 ರಿಂದ 2024-25" ರವರೆಗೆ ನಿಮಗೆ ಬೇಕಾದ ವರ್ಷ ಆಯ್ಕೆ ಮಾಡಿ ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಕೇಂದ್ರ ಸರ್ಕಾರ ಇತ್ತೀಚೆಗೆ ವಿಧವಾ ಪಿಂಚಣಿ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ, ಇದು ಲಕ್ಷಾಂತರ ಮಹಿಳೆಯರಿಗೆ ಪರಿಹಾರವನ್ನು ತರುತ್ತದೆ. ಈ ಹೆಚ್ಚಳದೊಂದಿಗೆ, ಪಿಂಚಣಿ ಮೊತ್ತವನ್ನು ಗಮನಾರ್ಹವಾಗಿ ಹೆಚ್ಚಿಸಲಾಗಿದ್ದು, ಇದರಿಂದಾಗಿ ಮಹಿಳೆಯರು ಉತ್ತಮ ಆರ್ಥಿಕ ಸಹಾಯವನ್ನು ಪಡೆಯಬಹುದು.
ವಿಧವಾ ಪಿಂಚಣಿ ಯೋಜನೆಯಡಿಯಲ್ಲಿ ಪಡೆಯುವ ಮೊತ್ತವನ್ನು ಮಹತ್ತರವಾಗಿ ಹೆಚ್ಚಿಸಲಾಗಿದೆ. ಮೊದಲು ಈ ಯೋಜನೆಯಲ್ಲಿ ತಿಂಗಳಿಗೆ 500 ರಿಂದ 1000 ರೂಪಾಯಿಗಳವರೆಗೆ ಸಿಗುತ್ತಿತ್ತು ಆದರೆ ಈಗ ಅದನ್ನು ತಿಂಗಳಿಗೆ 2000 ರಿಂದ 3000 ಕ್ಕೆ ಹೆಚ್ಚಿಸಲಾಗಿದೆ. ಇದರರ್ಥ ಮಹಿಳೆಯರು ಮೊದಲಿಗಿಂತ ಹೆಚ್ಚಿನ ಆರ್ಥಿಕ ಸಹಾಯವನ್ನು ಪಡೆಯಲು ಸಾಧ್ಯವಾಗುತ್ತದೆ, ಆದರೂ ಪ್ರತಿ ರಾಜ್ಯ ಸರ್ಕಾರವನ್ನು ಅವಲಂಬಿಸಿ ಮೊತ್ತವು ಸ್ವಲ್ಪ ಬದಲಾಗಬಹುದು. ಆದರೆ ಕೇಂದ್ರ ಸರ್ಕಾರದ ಶಿಫಾರಸಿನ ನಂತರ, ಇದನ್ನು ಅನೇಕ ರಾಜ್ಯಗಳಲ್ಲಿ ಜಾರಿಗೆ ತರಲಾಗಿದ್ದು, ಇದು ಮಹಿಳೆಯರ ಜೀವನವನ್ನು ಸ್ವಲ್ಪ ಸುಲಭಗೊಳಿಸುತ್ತದೆ.
ಪ್ರಮುಖ ಬದಲಾವಣೆಗಳು
ಪಿಂಚಣಿ ಮೊತ್ತ ₹1000 ದಿಂದ ₹2000 ಕ್ಕೆ ಏರಿಕೆ.
ಈಗ ನೀವು ಪ್ರತಿ ತಿಂಗಳು ₹2000 ರಿಂದ ₹3000 ಪಡೆಯುತ್ತೀರಿ.
ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ನಿಯಮಗಳು.
ಈ ಯೋಜನೆಯ ಲಾಭವನ್ನು ಯಾರು ಪಡೆಯಬಹುದು
ಮಹಿಳೆಯ ವಯಸ್ಸು 18 ವರ್ಷಗಳು ಆಗಿರಬೇಕು.
ಮಹಿಳೆಯ ವಾರ್ಷಿಕ ಆದಾಯವು ಸರ್ಕಾರ ನಿಗದಿಪಡಿಸಿದ ಮಿತಿಗಿಂತ ಕಡಿಮೆಯಿರಬೇಕು.
ಮಹಿಳೆಗೆ ಬೇರೆ ಯಾವುದೇ ಸರ್ಕಾರಿ ಪಿಂಚಣಿ ಯೋಜನೆಯ ಲಾಭ ಸಿಗಬಾರದು
ಮಹಿಳೆಯ ಹೆಸರಿನಲ್ಲಿ ಯಾವುದೇ ದೊಡ್ಡ ಆಸ್ತಿ ಅಥವಾ ಕೃಷಿ ಭೂಮಿ ಇರಬಾರದು.
ಈ ಷರತ್ತುಗಳನ್ನು ಪೂರೈಸುವ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬಹುದು.
ಪತಿಯ ಮರಣದ ನಂತರ ಆರ್ಥಿಕವಾಗಿ ದುರ್ಬಲರಾಗಿರುವ ಮತ್ತು ಉತ್ತಮ ಜೀವನ ನಡೆಸಲು ಸಹಾಯ ಬಯಸುವ ಮಹಿಳೆಯರಿಗಾಗಿ ಈ ಯೋಜನೆ ಇದೆ.
ಅರ್ಜಿ ಸಲ್ಲಿಸುವುದು ಹೇಗೆ?
ನೀವು ಈ ಯೋಜನೆಯ ಲಾಭ ಪಡೆಯಲು ಬಯಸಿದರೆ, ಅರ್ಜಿ ಸಲ್ಲಿಸುವುದು ತುಂಬಾ ಸುಲಭ. ನೀವು ಆನ್ಲೈನ್ ಮತ್ತು ಆಫ್ಲೈನ್ ಎರಡರಲ್ಲೂ ಅರ್ಜಿ ಸಲ್ಲಿಸಬಹುದು.
ರಾಜ್ಯಗಳಾದ್ಯಂತ ಪಿಂಚಣಿ ಮೊತ್ತ
ದೇಶದ ವಿವಿಧ ರಾಜ್ಯಗಳಲ್ಲಿ ಪಿಂಚಣಿ ಮೊತ್ತವು ಬದಲಾಗಬಹುದು. ಕೆಲವು ರಾಜ್ಯಗಳ ಪಿಂಚಣಿ ಮೊತ್ತದ ಬಗ್ಗೆ ಇಲ್ಲಿದೆ ಮಾಹಿತಿ
ರಾಜ್ಯ ಹಿಂದಿನ ಮೊತ್ತ (₹) ಹೊಸ ಮೊತ್ತ (₹)
ಉತ್ತರ ಪ್ರದೇಶ 500 1500₹
ಬಿಹಾರ 600 2000₹
ರಾಜಸ್ಥಾನ 750 2500₹
ಮಧ್ಯಪ್ರದೇಶ 1000 3000₹
ಹರಿಯಾಣ 1200 2500₹
ಮಹಾರಾಷ್ಟ್ರ 800 2000₹
ಕರ್ನಾಟಕ 900 2200₹
ಎಲ್ಲಾ ರೀತಿಯ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://dssp.karnataka.gov.in/dssp/villageWise_list_Of_beneficiaries.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಅಥವಾ ಪಟ್ಟಣ select ಮಾಡಿ, ಹೊಬಳಿ,ಗ್ರಾಮ select ಮಾಡಿ,Captch type ಮಾಡಿ, Search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿ ಪಿಂಚಣಿ ಪಡೆಯುವವರ ಹೆಸರು ಸಿಗಲಿದೆ
(ಸೂಚನೆ-Desktop mode open ಮಾಡಿಕೊಳ್ಳಿ)
Pension status-ಈ ತಿಂಗಳ ನಿಮ್ಮ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://dssp.karnataka.gov.in/dssp/Beneficiary_Status.aspx
ನಂತರ ನಿಮ್ಮ ಗ್ರಾಮದ ಪಟ್ಟಿಯಲ್ಲಿ ನಿಮ್ಮ beneficiary ID ಹಾಕಿ,captcha type ಮಾಡಿ search ಮೇಲೆ ಕ್ಲಿಕ್ ಮಾಡಿ
ನಂತರ click here to get payment details from SSP portal ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ beneficiary ID ಹಾಗೂ captcha code ಹಾಕಿ search ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ಇಲ್ಲಿಯವರೆಗೆ ಜಮಾ ಆದ ಪಿಂಚಣೆ ಹಣ ಮಾಹಿತಿ ದೊರೆಯಲಿದೆ
ಹೀಗೂ ಚೆಕ್ ಮಾಡಬಹುದು
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ pension ಮೇಲೆ ಕ್ಲಿಕ್ ಮಾಡಿ
ನಂತರ ಇಲ್ಲಿಯವರೆಗೂ ಜಮಾ ಆದ ಪಿಂಚಣೆ ಹಣ(pension amount)ಮಾಹಿತಿ ಸಿಗಲಿದೆ.
]]>
ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಚಿನ್ನದ ಬೆಲೆ ಇವತ್ತೂ ಭಾರೀ ಪ್ರಮಾಣದಲ್ಲಿ ಏರಿಕೆ ಆಗಿದೆ. ನಿನ್ನೆ ಗ್ರಾಮ್ಗೆ 95 ರೂನಷ್ಟು ಏರಿದ್ದ ಚಿನ್ನದ ಬೆಲೆ (Gold rate today) ಇವತ್ತು ಗುರುವಾರ ಬರೋಬ್ಬರಿ 105 ರೂಗಳಷ್ಟು ಹೆಚ್ಚಳ ಕಂಡಿದೆ. ಎರಡು ದಿನದಲ್ಲಿ 200 ರೂನಷ್ಟು ಬೆಲೆ ಜಂಪ್ ಆಗಿದೆ. ಭಾರತ ಹಾಗೂ ಬಹುತೇಕ ಎಲ್ಲಾ ದೇಶಗಳಲ್ಲೂ ಸ್ವರ್ಣ ಬೆಲೆ ಸಿಕ್ಕಾಪಟ್ಟೆ ಏರಿದೆ. ಅಮೆರಿಕದಲ್ಲಿ ಒಂದು ಗ್ರಾಮ್ ಚಿನ್ನದ ಬೆಲೆ ಮೊದಲ ಬಾರಿಗೆ 100 ಡಾಲರ್ ಗಡಿ ದಾಟಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಏರಿಕೆ ಕಂಡಿಲ್ಲ. ಒಂದು ಗ್ರಾಮ್ ಬೆಳ್ಳಿ 100 ರೂ ಮತ್ತು 110 ರೂನಲ್ಲಿ ಬೆಲೆ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 97,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 89,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,000 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಣ ಹವಾಮಾನವಿರುತ್ತದೆ.
ಯಾದಗಿರಿ, ಬೀದರ್, ಕಲಬುರ್ಗಿ, ಗದಗ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 50-60 ಕಿ.ಮೀ.) ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ.
ಕೊಡಗು, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ , ಚಿಕ್ಕಮಗಳೂರು, ಚಾಮರಾಜನಗರ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆ, ಯಾದಗಿರಿ, ಬೀದರ್, ಕಲಬುರ್ಗಿ, ಗದಗ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ, ಕೊಡಗು, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಚಾಮರಾಜನಗರ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ (ಗಂಟೆಗೆ 40-50 ಕಿ.ಮೀ) ಮಳೆಯಾಗುವ ಸಾಧ್ಯತೆ ಇದೆ.
*ಕರಾವಳಿ ಕರ್ನಾಟಕದಲ್ಲಿ ಮುಖ್ಯವಾಗಿ ಒಣ ಹವಾಮಾನ ಇರುವ ಸಾಧ್ಯತೆ ಹೆಚ್ಚು . ಯಾದಗಿರಿ, ಬೀದರ್, ಕಲಬುರ್ಗಿ, ಗದಗ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ, ಕೊಡಗು, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಚಾಮರಾಜನಗರ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ (40-50 ಕಿ.ಮೀ) ವೇಗದಲ್ಲಿ ಗಾಳಿಯೊಂದಿಗೆ ಹಗುರ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಏಪ್ರಿಲ್ 22, 2025 ರಂದು ಕರಾವಳಿ ಕರ್ನಾಟಕ ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ.
18.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸೆಖೆ ಸ್ವಲ್ಪ ಜಾಸ್ತಿಯೇ ಇರಲಿದೆ.
ಈಗಿನಂತೆ ಎಪ್ರಿಲ್ 20ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೊಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಎಪ್ರಿಲ್ 19 ಅಥವಾ 20 ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಒಳನಾಡಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
ಈಗಿನಂತೆ ಎಪ್ರಿಲ್ 20ರಿಂದ ದಕ್ಷಿಣ ಒಳನಾಡು ಹಾಗೂ 21 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
2025ನೇ ಸಾಲಿನ ಭಾರತೀಯ ಹವಾಮಾನ ಇಲಾಖೆಯ ಮುಂಗಾರು ಪ್ರಥಮ ಸುತ್ತಿನ ( ಜೂನ್ - ಸೆಪ್ಟೆಂಬರ್ ) ವರದಿ ಪ್ರಕಟಿಸಲಾಗಿದ್ದು, ರಾಜ್ಯದಲ್ಲಿ ಸಾಮಾನ್ಯ ಮುಂಗಾರು ಇರುವ ಸಾಧ್ಯತೆಗಳನ್ನು ಹೇಳುತ್ತಿದೆ.
]]> ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ 5ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ಈಗಾಗಲೇ ರಾಜ್ಯದ ಮಹಿಳಾ ಮಣಿಯರ ಖಾತೆಗೆ ಸರ್ಕಾರ ಪ್ರತಿ ತಿಂಗಳು ಬಂದ 2000 ರೂ. ಹಣವನ್ನು ಜಮಾ ಮಾಡುತ್ತಿದೆ. ಈ ಗೃಹ ಲಕ್ಷ್ಮಿ ಹಣವನ್ನ ಕೂಡಿಟ್ಟು ಅನೇಕ ಮಹಿಳೆಯರು ಸದುಪಯೋಗ ಪಡಿಸಿಕೊಂಡಂತಹ ನಿರ್ದರ್ಶನಗಳು ನೋಡಿದ್ದೇವೆ.
ಇದೀಗ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಎಂದು ಯಜಮಾನಿಯರ ಆರೋಪವಾಗಿತ್ತು.
ಈ ಕುರಿತಾಗಿ ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಅಪ್ಡೇಟ್ ನೀಡಿದ್ದು,ಫೆಬ್ರವರಿ ತಿಂಗಳ ಬಳ ಏಪ್ರಿಲ್ ಎರಡನೇ ವಾರದಂದು ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಹೇಳಿದ್ರು. ಇದೀಗ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಆದಷ್ಟು ಶೀಘ್ರದಲ್ಲಿ ಮಹಿಳೆಯವರ ಖಾತೆಗೆ ಜಮಾ ಆಗಲಿದೆ ಎಂದು ತಿಳಿದು ಬಂದಿದೆ.
ಈಗಾಗಲೇ ಜನವರಿ ತಿಂಗಳ ಗೃಹಲಕ್ಷ್ಮಿ ಹಣವನ್ನು ಕಳೆದ ಯುಗಾದಿ ಹಬ್ಬದ ಸಂದರ್ಭದಲ್ಲಿ ಮಹಿಳೆಯರ ಖಾತೆಗೆ ಜಮೆ ಮಾಡಲಾಗಿತ್ತು.ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಯಾವಾಗ ಜಮಾ ಆಗಲಿದೆ ಎಂದು ಮಹಿಳೆಯರು ಸರ್ಕಾರವನ್ನ ಪ್ರಶ್ನಿಸುತ್ತಿದ್ದಾರೆ. ಹಾಗಾಗಿ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಆದಷ್ಟು ಶೀಘ್ರದಲ್ಲಿ ಮಹಿಳೆಯವರ ಖಾತೆಗೆ ಗೃಹಲಕ್ಷ್ಮಿ ಹಣ ಜಮೆ ಆಗಲಿದೆ ಎಂದು ತಿಳಿದು ಬಂದಿದೆ.
Gruhalakshmi list-ಈ ಪಟ್ಟಿಯಲ್ಲಿರುವವರಿಗೆ ಜಮಾ ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ
ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಈಗಾಗಲೇ ಘಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣ ಕೂಡ ಬಿಡುಗಡೆಯಾಗಿದ್ದು, ಶೀಘ್ರವೇ ಜಮೆಯಾಗಲಿದೆ.” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ 12,726
ಹೆಕ್ಟರ್ ಬೆಳೆ ನಾಶ ಆಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ಬಹಳ ಕಡೆ ನಷ್ಟವಾಗಿದ್ದು, 12,726 ಹೆಕ್ಟರ್ ಬೆಳೆ ನಾಶ ಆಗಿದೆ. ಎನ್ಡಿಆರ್ಎಫ್ ಮೂಲಕ ಹಣ ನೀಡಿದರೆ ರೈತರಿಗೆ ಜಮಾ ಮಾಡಲಾಗುವುದು.
Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
"ಭಾರತವು ನಾಲ್ಕು ತಿಂಗಳ ಮಾನ್ಸೂನ್ ಋತುವಿನಲ್ಲಿ (ಜೂನ್ ನಿಂದ ಸೆಪ್ಟೆಂಬರ್) ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿಯ ಸರಾಸರಿ 87 ಸೆಂ.ಮೀ.ನಷ್ಟು ಸಂಚಿತ ಮಳೆಯಾಗುವ ಅಂದಾಜು ಮಾಡಲಾಗಿದೆ" ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಾನ್ಸೂನ್ ಮಳೆಗೆ ಸಂಬಂಧಿಸಿದ ಎಲ್ ನಿನೊ ಪರಿಸ್ಥಿತಿಗಳು ಈ ಬಾರಿ ಅಭಿವೃದ್ಧಿ ಹೊಂದುವ ಸಾಧ್ಯತೆ ಇಲ್ಲ. ದೇಶದ ಕೆಲವು ಭಾಗಗಳು ಈಗಾಗಲೇ ತೀವ್ರ ಶಾಖವನ್ನು ಎದುರಿಸುತ್ತಿವೆ ಮತ್ತು ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ ಗಮನಾರ್ಹವಾಗಿ ಹೆಚ್ಚಿನ ಸಂಖ್ಯೆಯ ಉಷ್ಣ ಅಲೆ ದಿನಗಳನ್ನು ನಿರೀಕ್ಷಿಸಲಾಗಿದೆ. ಇದು ವಿದ್ಯುತ್ ಗ್ರಿಡ್ಗಳನ್ನು ಒತ್ತಡಕ್ಕೆ ಒಳಪಡಿಸಬಹುದು ಮತ್ತು ನೀರಿನ ಕೊರತೆಗೆ ಕಾರಣವಾಗಬಹುದು ಎಂದು ಅವರು ಹೇಳಿದರು.
ಭಾರತದ ಕೃಷಿ ವಲಯಕ್ಕೆ ಮಾನ್ಸೂನ್ ನಿರ್ಣಾಯಕವಾಗಿದ್ದು, ಇದು ಸುಮಾರು ಶೇ. 42.3 ರಷ್ಟು ಜನಸಂಖ್ಯೆಯ ಜೀವನೋಪಾಯವನ್ನು ಬೆಂಬಲಿಸುತ್ತದೆ ಮತ್ತು ದೇಶದ ಜಿಡಿಪಿಗೆ ಶೇ. 18.2 ರಷ್ಟು ಕೊಡುಗೆ ನೀಡುತ್ತದೆ. ನಿವ್ವಳ ಸಾಗುವಳಿ ಪ್ರದೇಶದ ಶೇ.52ರಷ್ಟು ಭಾಗವು ಪ್ರಾಥಮಿಕ ಮಳೆ ವ್ಯವಸ್ಥೆಯನ್ನು ಅವಲಂಬಿಸಿದೆ.
ದೇಶಾದ್ಯಂತ ವಿದ್ಯುತ್ ಉತ್ಪಾದನೆಯ ಜೊತೆಗೆ ಕುಡಿಯುವ ನೀರಿಗೆ ನಿರ್ಣಾಯಕವಾಗಿರುವ ಜಲಾಶಯಗಳ ಮರುಪೂರಣಕ್ಕೂ ಇದು ನಿರ್ಣಾಯಕವಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ.
ಆದ್ದರಿಂದ, ಮಾನ್ಸೂನ್ ಋತುವಿನಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆಯು ರಾಷ್ಟ್ರಕ್ಕೆ ದೊಡ್ಡ ಪರಿಹಾರವಾಗಿದೆ. ಸಾಮಾನ್ಯ ಸಂಚಿತ ಮಳೆಯು ದೇಶಾದ್ಯಂತ ಮಳೆಯ ಏಕರೂಪದ ತಾತ್ಕಾಲಿಕ ಮತ್ತು ಪ್ರಾದೇಶಿಕ ವಿತರಣೆಯನ್ನು ಖಾತರಿಪಡಿಸುವುದಿಲ್ಲ, ಹವಾಮಾನ ಬದಲಾವಣೆಯು ಮಳೆ ನೀಡುವ ವ್ಯವಸ್ಥೆಯ ವ್ಯತ್ಯಾಸವನ್ನು ಮತ್ತಷ್ಟು ಹೆಚ್ಚಿಸುತ್ತದೆ.
ಹವಾಮಾನ ವಿಜ್ಞಾನಿಗಳು ಹೇಳುವಂತೆ ಮಳೆಗಾಲದ ದಿನಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಭಾರೀ ಮಳೆಯ ಘಟನೆಗಳು (ಅಲ್ಪಾವಧಿಯಲ್ಲಿ ಹೆಚ್ಚಿನ ಮಳೆ) ಹೆಚ್ಚುತ್ತಿವೆ, ಇದು ಆಗಾಗ್ಗೆ ಬರ ಮತ್ತು ಪ್ರವಾಹಗಳಿಗೆ ಕಾರಣವಾಗುತ್ತದೆ ಎಂದು ಹೇಳಿದೆ.
]]>
ರಾಜ್ಯ ಸರ್ಕಾರ ವಸತಿ ರಹಿತರಿಗೆ ಗುಡ್ ನ್ಯೂಸ್ ನೀಡಿದ್ದು, ಈ ವರ್ಷ 2.30 ಲಕ್ಷ ಮನೆಗಳ ನಿರ್ಮಾಣ ಮಾಡುವುದಾಗಿ ಘೋಷಿಸಿದೆ.
ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 1.80 ಲಕ್ಷ ಮನೆಗಳು ಮಂಜೂರಾಗಿದ್ದು, ಮೊದಲ ಹಂತದಲ್ಲಿ 36,789, ಎರಡನೇ ಹಂತದಲ್ಲಿ 39,843 ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗಿದೆ.
ಉಳಿದ 1.30 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ 46 ಸಾವಿರ ಮನೆ ಸೇರಿ ಈ ವರ್ಷ 2.30 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವರಾದ ಜಮೀರ್ ಅಹಮದ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಯೋಜನೆಯ ಹೆಸರು- ಪ್ರಧಾನ ಮಂತ್ರಿ ಆವಾಸ್ ( ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ವಸತಿ ಕಲ್ಪಿಸುವ ಯೋಜನೆ)
ಸಹಾಯಧನದ ಮೊತ್ತ
ಎಸ್ ಸಿ ಎಸ್ ಟಿ
ಕೇಂದ್ರದ ಪಾಲು -72,000
ರಾಜ್ಯದ ಪಾಲು-78,000
ಒಟ್ಟು -1,50,000
ಸಾಮಾನ್ಯ ವರ್ಗದವರಿಗೆ
ಕೇಂದ್ರದ ಪಾಲು-72,000
ರಾಜ್ಯದ ಪಾಲು-48,000
ಒಟ್ಟು -1,20,000
ಫಲಾನುಭವಿಯ ಸ್ವಸಹಾಯವಂತಿಕೆ
ಎಲ್ಲಾ ವರ್ಗದ ಫಲಾನುಭವಿಗಳಿಗೆ ಕನಿಷ್ಠ ಒಂದು ಲಕ್ಷ
ಈ ಯೋಜನೆ ಅಡಿಯಲ್ಲಿ ಒದಗಿಸಲಾಗುವ ಆರ್ಥಿಕ ಸಹಾಯದ ಜೊತೆಗೆ ಫಲಾನುಭವಿಯು ಕನಿಷ್ಠ 30,000 ಗಳನ್ನು ಅಥವಾ ತನ್ನ ಸಾಮರ್ಥ್ಯ ಹಾಗೂ ವಸತಿಯ ಅವಶ್ಯಕತೆಗೆ ಅನುಸಾರವಾಗಿ ಸಾಧ್ಯವಾದಷ್ಟು ಸ್ವಂತ ಉಳಿತಾಯ ಹೂಡಿಕೆ ಮಾಡಿ ಹೆಚ್ಚಿನ ಹಾಗೂ ಉತ್ತಮ ಸೌಲಭ್ಯಗಳನ್ನು ಹೊಂದಬಹುದು
ಡಿ ಆರ್ ಐ ಯಡಿ ಸಾಲ ಮತ್ತು ಬಡ್ಡಿಯ ದರ
ಈ ಯೋಜನೆಯಡಿ ಸ್ಥಳೀಯ ಬ್ಯಾಂಕಿನಿಂದ 20000 ವರೆಗೆ ನಾಲ್ಕು ಪರ್ಸೆಂಟ್ ವಾರ್ಷಿಕ ಬಡ್ಡಿ ದರದಲ್ಲಿ ಸಾಲವನ್ನು ಆಯ್ಕೆಯಾದ ಫಲಾನುಭವಿಗಳು ಪಡೆದುಕೊಳ್ಳಲು ಅವಕಾಶವಿರುತ್ತದೆ
ಫಲಾನುಭವಿಯ ಆಯ್ಕೆ
ಕೇಂದ್ರ ಸರ್ಕಾರದಿಂದ ನೀಡಲಾದ ಫಲಾನುಭವಿಗಳ ಪಟ್ಟಿಯಿಂದ ನಿಯಮಾನುಸಾರ ಗ್ರಾಮ ಸಭೆಯಲ್ಲಿ ಆಯ್ಕೆ ಮಾಡಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಪಟ್ಟಿಗೆ ಅನುಮೋದನೆ ಪಡೆಯಲಾಗುವುದು. ನಂತರ ಸಂಬಂಧಪಟ್ಟ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಯ ಅನುಮೋದನೆಯೊಂದಿಗೆ ನಿಗಮದ ಅನುಮೋದನೆ ನೀಡಲಾಗುವುದು.
ಯೋಜನೆಯ ಅನುಷ್ಠಾನ
ಪ್ರತಿ ವರ್ಷ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಗುರಿಗನುಗುಣವಾಗಿ ಗುರಿ ನಿಗದಿಪಡಿಸಲಾಗುವುದು
ಮೀಸಲಾತಿ-SC ST ಶೇಕಡ 60%
ಅಲ್ಪಸಂಖ್ಯಾತ ಶೇಕಡ 15%
ಸಾಮಾನ್ಯ ಶೇಕಡಾ 25%
ಜಿಪಿಎಸ್ ತಂತ್ರಜ್ಞಾನ ಅಳವಡಿಕೆ
2011 12 ನೇ ಸಾಲಿನಿಂದ ಜಿಪಿಎಸ್ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತಿದೆ
ಅವ್ಯವಹಾರವನ್ನು ತಡೆಗಟ್ಟಲು ಹಾಗೂ ಸರ್ಕಾರದ ಹಣ ದುರುಪಯೋಗವಾಗದಂತೆ ನೋಡಿಕೊಂಡು ಫಲಾನುಭವಿಗಳಿಗೆ ವಸತಿ ಸೌಕರ್ಯವನ್ನು ಪಾರದರ್ಶಕತೆಯ ಮೂಲಕ ನೀಡಲು ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ಈ ತಂತ್ರಜ್ಞಾನದ ಉಪಯೋಗಗಳು ಇಂತಿವೆ
ಪ್ರತಿ ಮನೆಯ ಪ್ರಗತಿ ಹಂತದ ಛಾಯಾಚಿತ್ರವನ್ನು ಜಿಪಿಎಸ್ ಕ್ಯಾಮೆರಾ ಮೂಲಕ ಸೆರೆ ಹಿಡಿಯುವುದು
ಒಮ್ಮೆ ವಸತಿ ಸೌಕರ್ಯ ಪಡೆದ ಫಲಾನುಭವಿಗಳ ಪುನರಾವರ್ತನೆಗೆ ತಡೆ
ಛಾಯಾಚಿತ್ರದ ಆಧಾರದ ಮೇಲೆ ಅನುದಾನ ಬಿಡುಗಡೆ
ಮಾಹಿತಿಗಾಗಿ ಎಲ್ಲಾ ಮನೆಗಳ ಛಾಯಾಚಿತ್ರಗಳು ನಿಗಮದ ವೆಬ್ ಸೈಟ್ ನಲ್ಲಿ ಲಭ್ಯ
ಹಣದ ದುರ್ಬಳಕೆಗೆ ತಡೆ
ಅರ್ಹತೆ ಮತ್ತು ಷರತ್ತುಗಳು
ಸಂಬಂಧಪಟ್ಟ ಗ್ರಾಮ ಪಂಚಾಯತ್ ವಾಸಿ ಆಗಿರಬೇಕು
ಮನೆ ನಿವೇಶನ ಹಕ್ಕು ಪತ್ರವನ್ನು ಹೆಂಡತಿ ಹೆಸರಿನಲ್ಲಿ ವಿತರಿಸಬೇಕು
ಬೇರೆ ಯಾವುದೇ ಯೋಜನೆ ಅಥವಾ ಇಲಾಖೆಯಿಂದ ಈಗಾಗಲೇ ವಸತಿ ಸೌಲಭ್ಯ ಪಡೆದಿರಬಾರದು
ಮನೆಗಳ ವಿಸ್ತೀರ್ಣ ಮತ್ತು ವಿನ್ಯಾಸ : ಕನಿಷ್ಠ 25 ಚದರ ಮೀಟರ್ ನೆಲಗಟ್ಟು ವಿಸ್ತೀರ್ಣ ಇರುವಂತೆ ಮನೆ ನಿರ್ಮಿಸಬೇಕು. ಇದಕ್ಕಾಗಿ ಯಾವುದೇ ನಕ್ಷೆ ಅಥವಾ ವಿನ್ಯಾಸ ನಿಗದಿಪಡಿಸಿರುವುದಿಲ್ಲ. ಆದರೆ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಮಣ್ಣು ಹವಾ ಗುಣ ಪರಿಸ್ಥಿತಿ ಸ್ಥಳೀಯವಾಗಿ ಲಭ್ಯವಿರುವ ಸಾಮಗ್ರಿಗಳ ಬಳಕೆ ಇತ್ಯಾದಿ ಅಂಶಗಳನ್ನು ಪರಿಗಣಿಸಿ ಪ್ರದೇಶವಾರು ಮತ್ತು ಬದಲಿ ವಿನ್ಯಾಸಗಳನ್ನು ಅನುಸರಿಸಬಹುದು ಮನೆ ನಿರ್ಮಾಣದ ಪ್ರತಿ ಹಂತದಲ್ಲಿಯೂ ಫಲಾನುಭವಿ ಸಕ್ರಿಯವಾಗಿ ಪಾಲ್ಗೊಂಡು ಒಳ್ಳೆಯ ಗುಣಮಟ್ಟದ ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಹೊಂದಬಹುದು.
ಒಟ್ಟಾರೆ ಆಗಿದ್ದಾಗೆ ಸರ್ಕಾರವು ವಸತಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಧಿಸಬಹುದಾದ ನಿಯಮ ಮತ್ತು ಷರತ್ತುಗಳನ್ನು ತಪ್ಪದೇ ಪಾಲಿಸಬೇಕು
ಮನೆ ನಿರ್ಮಾಣ ಮಾಡುವ ಕ್ರಮ
ಸ್ವಂತ ಫಲಾನುಭವಿಗಳಿಂದ
ಫಲಾನುಭವಿಯೇ ಸ್ವಂತ ತನ್ನ ಮನೆಯನ್ನು ಸ್ಥಳಿಯವಾಗಿ ಅನುಮೋದಿತ ನಕ್ಷೆಗಳನ್ನು ಗುಣವಾಗಿ ಕಟ್ಟಿಕೊಳ್ಳಬಹುದು( ಇದಕ್ಕಾಗಿ ಕಾಮಗಾರಿ ಆದೇಶ ಹೊರಡಿಸಿ ನಿಗದಿತ ಕಂತುಗಳಲ್ಲಿ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆ ಮೂಲಕ ನೀಡಲಾಗುವುದು ನಿರ್ಮಾಣ ಸಂಸ್ಥೆ ಮೂಲಕ ಮನೆ ನಿರ್ಮಾಣಕ್ಕೆ ಅವಕಾಶ ಇರುವುದಿಲ್ಲ )
ಮನೆ ನಿರ್ಮಾಣ ಅವಧಿ
ಕನಿಷ್ಠ ನಾಲ್ಕು ತಿಂಗಳ ಒಳಗಾಗಿ ಮನೆಯನ್ನು ಪೂರ್ಣಗೊಳಿಸುವುದು
ಒದಗಿಸಬೇಕಾದ ದಾಖಲೆಗಳು
ಫಲಾನುಭವಿಯಿಂದ
ವಸತಿಗಾಗಿ ನಿಗದಿತ ಅರ್ಜಿ
ನಿವೇಶನ ಅಥವಾ ಮನೆಯನ್ನು ಸಾಲ ತೀರುವವರೆಗೂ ನಿಗಮದ ಪರವಾಗಿ ಅಡಮಾನ ಪತ್ರ ಬರೆದು ಕೊಡಬೇಕು
ಜಾತಿ ಪ್ರಮಾಣ ಪತ್ರ ಅಥವಾ ಆದಾಯ ಪ್ರಮಾಣ ಪತ್ರ
ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಥವಾ ಕಾರ್ಯನಿರ್ವಹಣಾಧಿಕಾರಿ ಅಥವಾ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಿಂದ
ಗ್ರಾಮ ಪಂಚಾಯಿತಿ ಅಥವಾ ಇಲಾಖೆ ಯೋಜನೆಯ ಅಡಿಯಲ್ಲಿ ನಿಯಮಗಳನ್ನು ಪಾಲಿಸಿರುವ ಬಗ್ಗೆ ಹಾಗೂ ದಾಖಲೆಗಳನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ಬಗ್ಗೆ ದೃಢೀಕರಣ ಪತ್ರ
ನಿಗದಿಪಡಿಸಿದ ನಮೂನೆಗಳಲ್ಲಿ ಪ್ರತಿ ತಿಂಗಳು ಅಥವಾ ವರ್ಷ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಗತಿ ವರದಿಗಳನ್ನು ತಪ್ಪದೆ ಸಲ್ಲಿಸಬೇಕು
ವಸತಿ ಯೋಜನೆಯ ಯಶಸ್ವಿ ಅನುಷ್ಠಾನದ ಬಗ್ಗೆ ಸಂಬಂಧಿಸಿದ ಇತರೆ ಮಾಹಿತಿ ಇತ್ಯಾದಿ
ಹೆಚ್ಚಿನ ವಿವರಗಳಿಗೆ ಈ ಕೆಳಕಂಡವರನ್ನು ಸಂಪರ್ಕಿಸಿ
ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ
ನಂಬರ್ 1 2 3 4
ಐ ಟಿ ಪಾರ್ಕ್ 1ನೇ ಮಾಡಿ ನಾಲ್ಕನೇ ಮುಖ್ಯ ರಸ್ತೆ ಕೈಗಾರಿಕಾ ಪ್ರದೇಶ ರಾಜಾಜಿನಗರ-580044
ದೂರವಾಣಿ-23118888
ಇ-ಮೇಲ್ -[email protected]
ವೆಬ್ ಸೈಟ್ - http://ashraya.kar.nic.in/
ನಿಮ್ಮ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಪಂಚಾಯತ್
ಆಯಾಯ ಸಂಬಂಧಿಸಿದ ಜಿಲ್ಲೆಗಳು
ಸಂಬಂಧಪಟ್ಟ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು
ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು
ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ.2, 2025 ಆಗಿರುತ್ತದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಸಾಲಿನ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಎಲೆಕ್ಟ್ರಿಕ್ ದ್ವಿಚಕ್ರ ವಾಹನ, ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಎಂದಿದೆ.
ಬೀದಿ ಬದಿ ವ್ಯಾಪಾರಸ್ಥರಿಗೆ ಇ-ವೆಂಡಿಂಗ್ ವಾಹನವನ್ನು ಖರೀದಿಸಲು ಆರ್ಥಿಕ ಸಹಾಯ ಮಾಡಲಾಗುತ್ತದೆ. ಮಾನ್ಯುಯಲ್ ವೆಂಡಿಂಗ್ ವಾಹನ ಹಾಗೂ ಎಲೆಕ್ಟ್ರಿಕಲ್ ಇ-ವೆಂಡಿಂಗ್ ವಾಹನ ಖರೀದಿಸಲು ಸಹಾಯಧನ ಮಾಡಲಾಗುತ್ತದೆ ಎಂದು ತಿಳಿಸಿದೆ.
ಇ-ವೆಂಡಿಂಗ್ ವಾಹನದ ಗರಿಷ್ಠ ಮೊತ್ತ ರೂ.1,50,000 ಆಗಿರುತ್ತದೆ. ಇದರಲ್ಲಿ ಶೇ.90ರಷ್ಟು ಬಿಬಿಎಂಪಿ ಸಹಾಯಧನವಾಗಿದ್ದರೇ, ಶೇ.10ರಷ್ಟು ಬಂಡವಾಳ ನೀಡಲು ಸಿದ್ಧರಿರುವ ಬೀದಿ ಬದಿಯ ವ್ಯಾಪಾರಿಗಳು ಇ-ವೆಂಡಿಂಗ್ ವಾಹನ ಖರೀದಿಸಲು ಅರ್ಜಿ ಸಲ್ಲಿಸಬಹುದಾಗಿದೆ ಎಂಬುದಾಗಿ ಹೇಳಿದೆ.
ಯಾವೆಲ್ಲಾ ವಾಹನ ಖರೀದಿಗೆ ಸಹಾಯಧನ?
ಮಾನ್ಯುಯಲ್ ವೆಂಡಿಂಗ್ ವಾಹನ
ಎಲೆಕ್ಟ್ರಿಕಲ್ ಇ-ವೆಂಡಿಂಗ್ ವಾಹನ
ತರಕಾರಿ ಇ-ವೆಂಡಿಂಗ್ ವಾಹನ, ಹೂ ಮಾರಾಟ ಇ-ವೆಂಡಿಂಗ್ ವಾಹನ, ಐಸ್ ಕ್ರೀಂ ಇ-ವೆಂಡಿಂಗ್ ವಾಹನ, ಪ್ರೂಟ್ಸ್ ಇ-ವೆಂಡಿಂಗ್ ವಾಹನ, ಪ್ರೂಟ್ ಜ್ಯೂಸ್ ಇ-ವೆಂಡಿಂಗ್ ವಾಹನ, ಪಾನಿಪೂರಿ ಮತ್ತು ಚಾಟ್ಸ್ ಇ-ವೆಂಡಿಂಗ್ ವಾಹನ, ಫಾಸ್ಟ್ ಪುಡ್ ಇ-ವೆಂಡಿಂಗ್ ವಾಹನ, ಬಟ್ಟೆ ಇ-ವೆಂಡಿಂಗ್ ವಾಹನ ಹಾಗೂ ಇತರೆ ಇ-ವೆಂಡಿಂಗ್ ವಾಹನ ಖರೀದಿಸಲು ಆರ್ಥಿಕ ನೆರವಿನ ಸಹಾಯಧನವನ್ನು ಬಿಬಿಎಂಪಿ ನೀಡಲಿದೆ.
ಅರ್ಜಿಯೊಂದಿಗೆ ಈ ದಾಖಲೆ ಸಲ್ಲಿಕೆ ಕಡ್ಡಾಯ
ವಾಸ ದೃಢೀಕರಣ ಪ್ರಮಾಣ ಪತ್ರ
ಆಧಾರ್ ಪ್ರತಿ
ವಯಸ್ಸಿನ ದೃಢೀಕರಣ ಪ್ರಮಾಣ ಪತ್ರ
ಪಡಿತರ ಚೀಟಿ
ವಾರ್ಷಿಕ ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರ
ತೃತೀಯ ಲಿಂಗ ಎಂಬುದರ ಬಗ್ಗೆ ಸಂಬಂಧ ಪಟ್ಟ ಇಲಾಖೆಯ ಪ್ರಮಾಣ ಪತ್ರ
ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ
ಕಾರ್ಯಕ್ರಮಕ್ಕೆ ತಕ್ಕಂತೆ ಅಗತ್ಯವಾಗಿ ಬೇಕಾಗಿರುವ ದಾಖಲೆಗಳು.
ಈ ಮೇಲ್ಕಂಡ ದಾಖಲೆಗಳೊಂದಿಗೆ ಮಹಾನಗರ ಪಾಲಿಕೆ ಕಚೇರಿಗೆ ತೆರಳಿ, 2024-25ನೇ ಸಾಲಿನ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ನಮೂನೆಯನ್ನು ಪಡೆದು, ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಲ್ಲವೇ ಈ ಸುದ್ದಿಯ ಕೆಳಗಿರುವಂತ ಅರ್ಜಿಯನ್ನು ಭರ್ತಿ ಮಾಡಿ, ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದು. ಈ ಸಂಬಂಧದ ಹೆಚ್ಚಿನ ಮಾಹಿತಿಗಾಗಿ https://bbmp.gov.in/home ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ.
]]>
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ(Pradan mantri kisan samman yojane)
ಅಡಿ ಅರ್ಹ ಎಲ್ಲ ರೈತರಿಗೆ ಸೌಲಭ್ಯ ನೀಡಲು ಕೇಂದ್ರ ಸರ್ಕಾರ ಸಿದ್ದವಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಹೇಳಿದರು.
ಲೋಕಸಭೆಯಲ್ಲಿ ಮಂಗಳವಾರ ಪ್ರಶೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಭೂ ರಹಿತರಿಗೆ ಈ ಸೌಲಭ್ಯ ನೀಡುವುದಿಲ್ಲ. ಆದರೆ, ತುಂಡು ಕೃಷಿ ಭೂಮಿಯನ್ನಾದರೂ ಹೊಂದಿರಬೇಕು ಎಂದು ವಿವರಿಸಿದರು.
'ಈ ಯೋಜನೆಯಡಿ ಕೇಂದ್ರ ಸರ್ಕಾರವು ಈವರೆಗೆ 19 ಕಂತುಗಳಲ್ಲಿ ₹3.68 ಲಕ್ಷ ಕೋಟಿ ಮೊತ್ತವನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದೆ' ಎಂದರು.
ಯೋಜನೆಯ ಭಾಗವಾಗಿಲ್ಲದ ಎಲ್ಲ ಅರ್ಹ ರೈತರಿಗೆ ವಾರ್ಷಿಕ ₹6,000 ನಗದು ಪ್ರಯೋಜನ ನೀಡಲು ಸರ್ಕಾರ ಸಿದ್ಧವಾಗಿದೆ. ಅಂತಹ ರೈತರಿಗೆ ಹಿಂದಿನ ಕಂತುಗಳನ್ನು ನೀಡಲು ಸಿದ್ಧರಿದ್ದೇವೆ. ಅಂತಹ ರೈತರನ್ನು ಗುರುತಿಸಿ ಯೋಜನೆಯಲ್ಲಿ ಸೇರಿಸಲು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಅವರು ಕೋರಿದರು.
ಪಿಎಂ ಕಿಸಾನ್(kisan samman) ಅರ್ಹತೆಯ ಮಾನದಂಡಗಳೇನು?
ಎಲ್ಲ ಅರ್ಹ ಫಲಾನುಭವಿಗಳು ಕನಿಷ್ಠ ಪ್ರಮಾಣದ ಭೂಮಿ ಹೊಂದಿರಬೇಕು. ಇ-ಕೆವೈಸಿ ಮಾಡಿಸಿಕೊಳ್ಳಬೇಕು ಮತ್ತು ಪಿಎಂ-ಕಿಸಾನ್ ಪೋರ್ಟಲ್ನಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು.
ನಿಧಿಯನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಗಾಯಿಸಲಾಗುತ್ತದೆ ಎಂದು ಅವರು ಹೇಳಿದರು.
ಇಲ್ಲಿಯವರೆಗೂ 19 ಕಂತುಗಳಲ್ಲಿ 3.68 ಲಕ್ಷ ಕೋಟಿ ಪಿಎಂ ಕಿಸಾನ್ ಹಣ ರೈತರ ಖಾತೆಗೆ
ಇದುವರೆಗೆ 3.68 ಲಕ್ಷ ಕೋಟಿ ರೂಪಾಯಿಗಳನ್ನು 19 ಕಂತುಗಳಲ್ಲಿ ದೇಶದಾದ್ಯಂತದ ರೈತರಿಗೆ ವಿತರಿಸಲಾಗಿದೆ
ನಿಮಗೇಷ್ಟು ಜಮಾ ಹೀಗೆ ಚೆಕ್ ಮಾಡಿ-Pmkisan beneficiary status
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಮೊದಲು know your status ಮೇಲೆ ಕ್ಲಿಕ್ ಮಾಡಿ
ನಂತರ know your register number ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ
ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.
ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ
ನಂತರ update your details ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ
Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.
ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ
Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.
FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ ಕಾರಣ ಮತ್ತು ಪರಿಹಾರ
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
fruitspmk.gov.in ಪೋರ್ಟಲ್ ನಲ್ಲಿ |
|||
1 |
ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ |
ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು |
ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ (NIC) ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ. ಆ) ಸಮಸ್ಯಾತ್ಮಕ ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ. |
2 |
ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು |
ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ |
ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ |
3 |
ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು |
ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ |
ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ |
4 |
ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ |
ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ |
OPERATOR ಲಾಗಿನ್ (RSK, ADA office, JDA office) OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು |
5 |
01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ |
ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ |
ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ) |
6 |
Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು |
ಜಿಲ್ಲೆಗಳಲ್ಲಿ OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ |
AAO ಲಾಗಿನ್ (RSK, ADA office, JDA office) AAO ಲಾಗಿನ್ನಲ್ಲಿ ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ, ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
7 |
ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ |
ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ) |
AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ. |
8 |
PFMS rejected |
Aadhaar Number is not seeded in NPCI |
ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ |
Bank Name And IFSC Code are not related to each other |
ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ |
||
Bank Name is not as per PFMS Bank Master. |
|||
Beneficiary is rejected as Account Type is other than SB / SBA / JD |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ) |
||
Duplicate Beneficiary Name , Bank Account No and Bank Name not allowed for same scheme |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
IFSC Code either not present or currently inactive in tbl BankBranch |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
Incorrect Aadhaar Number |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
One or more mandatory tags values are missing. |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
||
Rejected by Bank, Account No does not exist in Bank/INVALID/CLOSED |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
9 |
Amount credited to Account Number-NA |
Aadhaar number based payment by GoI |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ. |
10 |
PAYMENT STOPPED BY STATE |
XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ |
ಕೇಂದ್ರ ಸರ್ಕಾರ |
11 |
Transaction failed |
ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ. |
12 |
ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ |
OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ |
ಕೇಂದ್ರ ಸರ್ಕಾರ |
13 |
ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು |
ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ. |
ಕೇಂದ್ರ ಸರ್ಕಾರ ದ pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ. |
ಚಿನ್ನದ ದರ (Gold Price) ಪ್ರತಿ 10 ಗ್ರಾಮ್ಗೆ 55 ಸಾವಿರ ರೂ.ಗೆ ಇಳಿಯುತ್ತದೆಯಂತೆ ಹೌದಾ? ಎಂಬ ಪ್ರಶ್ನೆಯನ್ನು ನೀವು ಕೇಳಿರಬಹುದು. ಆದರೆ ಮತ್ತೊಂದು ಕಡೆ ಮಾರುಕಟ್ಟೆಯಲ್ಲಿ ಈಗ 24 ಕ್ಯಾರಟ್ ಚಿನ್ನದ ದರ 95,670 ರೂ. ಎತ್ತರದ ಮಟ್ಟದಲ್ಲಿದೆ (Gold rates in India).
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ದರ ಏರುಗತಿಯಲ್ಲಿದ್ದು, ಪ್ರತಿ ಔನ್ಸಿಗೆ 3,100 ಡಾಲರ್ ಮೇಲಿದೆ. ಹಾಗಾದರೆ ವಾಸ್ತವವಾಗಿ ಏನಾಗುತ್ತಿದೆ? ಬಂಗಾರದ ದರ 55 ಸಾವಿರ ರೂ.ಗೆ ಇಳಿಯಲಿದೆ ಎಂದು ಹೇಳಿದವರು ಯಾರು? ಈ ಎಲ್ಲ ವಿವರಗಳನ್ನು ತಿಳಿದುಕೊಳ್ಳೋಣ.
ಭಾರತದಲ್ಲಿ ಬಂಗಾರ ಎಂದರೆ ಬಹುತೇಕ ಎಲ್ಲರಿಗೂ ಇಷ್ಟ. ಅದಕ್ಕೆ ಸಂಬಂಧಿಸಿ ಜಗತ್ತಿನ ಯಾವುದೇ ಭಾಗದಲ್ಲಿ ಸಣ್ಣ ಸುದ್ದಿಯಾದರೂ, ಕೋಟ್ಯಂತರ ಭಾರತೀಯರಿಗೆ ಹೇಗೋ ತಲುಪುತ್ತೆ. ಇತ್ತೀಚೆಗೆ ಅದೊಂದು ಸುದ್ದಿ ಹರಡಿದೆ. ಚಿನ್ನದ ದರ 55 ಸಾವಿರ ರೂ.ಗೆ ಇಳಿಯುತ್ತದೆಯಂತೆ ಎಂಬ ಅಂತೆ ಕಂತೆಗಳ ಸುದ್ದಿ ಮನೆಮನೆಗೂ ಮುಟ್ಟಿದೆ. ಆದರೆ ನೆನಪಿಡಿ ಸದ್ಯದ ಪರಿಸ್ಥಿತಿ ನೋಡಿದರೆ ಇಂತಹ ಸಾಧ್ಯತೆ ಕಡಿಮೆ. ಜತೆಗೆ ಅದೊಂದು ವದಂತಿಯಷ್ಟೇ. ಮಾತ್ರವಲ್ಲದೆ ಚಿನ್ನದ ದರ 1 ಲಕ್ಷ ರೂ. ಗಡಿ ದಾಟಲಿದೆ ಎಂಬ ವರದಿಗಳಿವೆ. ಆ ವರದಿಗಳು ವಾಸ್ತವವಕ್ಕೆ ಹತ್ತಿರದಲ್ಲಿದೆ ಎನ್ನಬಹುದು. ಏಕೆಂದರೆ ಈಗಾಗಲೇ ಚಿನ್ನದ ದರ 94-95 ಸಾವಿರ ರೂ.ಯ ಉನ್ನತ ಮಟ್ಟದಲ್ಲಿ ಇದೆ.
]]>ದಕ್ಷಿಣ ಕನ್ನಡ ಮತ್ತು ಉಡುಪಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದೆ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ , ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ
ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಲಿದೆ. ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ (ಗಂಟೆಗೆ 40-50 ಕಿ.ಮೀ) ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಮೇಲೆ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಮಧ್ಯಂತರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
]]>
ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ 12,726
ಹೆಕ್ಟರ್ ಬೆಳೆ ನಾಶ ಆಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ಬಹಳ ಕಡೆ ನಷ್ಟವಾಗಿದ್ದು, 12,726 ಹೆಕ್ಟರ್ ಬೆಳೆ ನಾಶ ಆಗಿದೆ. ಎನ್ಡಿಆರ್ಎಫ್ ಮೂಲಕ ಹಣ ನೀಡಿದರೆ ರೈತರಿಗೆ ಜಮಾ ಮಾಡಲಾಗುವುದು.
Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ - https://krushirushi.in/Tahasildar-varification-status-approved-1634
]]>
ಮುಂಗಾರು ಮಳೆಯ ತೀವ್ರತೆ ಹೆಚ್ಚಳವಾಗಲು ಕಾರಣವಾಗುವ ಪೆಸಿಫಿಕ್ ಸಾಗರದ ಲಾ ನಿನಾ ಈಗಾಗಲೇ ಅಂತ್ಯಗೊಂಡಿದ್ದು, ಮುಂಗಾರು ಮಳೆ ಈ ಬಾರಿ ಸಾಮಾನ್ಯವಾಗಿರಲಿದೆ ಎಂದು ಅಮೆರಿಕದ ತಜ್ಞರು ಹೇಳಿದ್ದಾರೆ. ಹೀಗಾಗಿ ದೇಶದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆಯ ಸಮಯದಲ್ಲಿ ಯಾವುದೇ ಅತಿವೃಷ್ಟಿಯ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಎನ್ನಲಾಗಿದೆ. ಅಲ್ಲದೇ ಹಿಂದೂ ಮಹಾಸಾಗರದಲ್ಲೂ ಮಾರುತಗಳ ಪರಿಸ್ಥಿತಿ ತಟಸ್ಥವಾಗಿರುವುದರಿಂದ ನೈಋತ್ಯ ಮುಂಗಾರು ಮಾರುತಗಳು ಈ ಬಾರಿ ಸಾಮಾನ್ಯವಾಗಿರಲಿವೆ ಎಂದು ಅವರು ಹೇಳಿದ್ದಾರೆ. 12 ವರ್ಷಗಳಲ್ಲಿ 2013, 2019 ಮತ್ತು 2024ರಲ್ಲಿ ಮಾತ್ರ ಪೆಸಿಫಿಕ್ ಸಾಗರದ ಎಲ್ನಿನೋ ಮತ್ತು ಲಾ ನಿನಾ ಪರಿಸ್ಥಿತಿಗಳು ತಟಸ್ಥವಾಗಿದ್ದವು ಎಂದು ತಿಳಿಸಿದ್ದಾರೆ.
ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಅರಬ್ಬಿ ಸಮುದ್ರ ಕಡೆಯಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಮೋಡಗಳು ಪೂರ್ವಕ್ಕೆ ಅಂದರೆ ಒಳನಾಡು ಕಡೆ ಚಲಿಸುತ್ತಿದೆ.
ಮುನ್ಸೂಚನೆ ಇದ್ದರೂ ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಚಲಿಸುವ ಮೋಡಗಳಿಂದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಎಪ್ರಿಲ್ 13ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 13ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಬಳ್ಳಾರಿ ಜಿಲ್ಲೆಯಲ್ಲೂ ಮಳೆ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 13ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುವ ಲಕ್ಷಣಗಳಿವೆ.
ಟೈಮ್ಸ್ ಆಫ್ ಇಂಡಿಯಾ ವರದಿಯಂತೆ ಲಾನಿನಾ ಅವಧಿ ಮುಕ್ತಾಯದ ಹಂತದಲ್ಲಿದೆ.
ಪೆಸಿಫಿಕ್ ಸಾಗರದ ಮೇಲ್ಮೈ ಉಷ್ಣತೆ ತೀರ ಬಿಸಿಯೂ ಅಲ್ಲ ಅಥವಾ ತೀರ ತಣ್ಣನೆಯೂ ಅಲ್ಲದ ತಟಸ್ಥ ಸ್ಥಿತಿಗೆ ತಲಪುವ ನಿರೀಕ್ಷೆಯಿದೆ.
ಇದರಿಂದ 2025ನೇ ಸಾಲಿನ ನಮ್ಮ ಮುಂಗಾರು ಸಾಮಾನ್ಯವಿರುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರದ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 2024-25 ನೇ ಸಾಲಿನಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಕೇಂದ್ರ ಸರ್ಕಾರದಿಂದ 2 ನೇ ಕಂತಿನ ಅನುದಾನ ರೂ. 366.00 ಕೋಟಿಗಳನ್ನು ಮೇಲೆ ಓದಲಾದ (7) ರ ಪತ್ರದಲ್ಲಿ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುತ್ತದೆ. ಮೇಲೆ ಓದಲಾದ (8) ರ ಹಿಂಬರಹದಲ್ಲಿ ಆರ್ಥಿಕ ಇಲಾಖೆಯು 2 ನೇ ಕಂತಿನ ರಾಜ್ಯದ ಪಾಲು ರೂ. 122.00 ಕೋಟಿಗಳನ್ನು ಬಿಡುಗಡೆ ಮಾಡಿರುತ್ತದೆ.
ವಿವತ್ತು ನಿರ್ವಹಣೆಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರದ ಗ್ರಹ ಮಂತ್ರಾಲಯವು ಹೊರಡಿಸಿರುವ ಮಾರ್ಗಸೂಚಿಗಳನ್ವಯ ವಿಪತ್ತು ನಿರ್ವಹಣೆಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಿರ್ದೇಶಕರು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ರವರಿಗೆ ಹಾಗೂ ನೈಸರ್ಗಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ತಕ್ಷಣ ನಿಭಾಯಿಸಲು ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡುವುದು ಅವಶ್ಯಕವಾಗಿರುತ್ತದೆ.
ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಈಗಾಗಲೇ ಮುಂಜಾನೆ ಉತ್ತಮ ಮಳೆಯಾಗಿದೆ. ಆದರೂ ಸಂಜೆ ಅಥವಾ ರಾತ್ರಿ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಆದರೆ ಗಾಳಿಯ ಪ್ರಭಾವ ಪ್ರಮುಖವಾಗಿದೆ. ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಘಟ್ಟ ಪ್ರದೇಶದ ಮೋಡಗಳು ಪೂರ್ವಕ್ಕೆ ಅಂದರೆ ಬಂಗಾಳಕೊಲ್ಲಿಯ ಕಡೆ ಚಲಿಸುವ ಸಾಧ್ಯತೆಗಳಿವೆ. ಹೀಗೆ ಸಂಭವಿಸಿದರೆ ಮಳೆಯ ಸಾಧ್ಯತೆ ಕಡಿಮೆಯಾಗಬಹುದು.
ಈಗನಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿದೆ.
ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 12ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದರೂ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಪೂರ್ವಕ್ಕೆ ಚಲಿಸುವ ಮೋಡಗಳಿಂದ ಬಳ್ಳಾರಿ ತನಕವೂ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ದಿನ ಬಿಟ್ಟು ದಿನ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಗಳಿವೆ.
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಭಾರತೀಯ ರಿಸರ್ವ್ ಬ್ಯಾಂಕ್ (Reserve bank India) ಮೇಲಾಧಾರ ರಹಿತ ಕೃಷಿ ಸಾಲದ ಮಿತಿಯನ್ನು.ಗೆ ಹೆಚ್ಚಿಸಿದೆ. ಈ ಕ್ರಮವು ಸಣ್ಣ ರೈತರಿಗೆ ಸಹಾಯ ಮಾಡುತ್ತದೆ ಮತ್ತು ಕೃಷಿ ವಲಯವನ್ನು ಬಲಪಡಿಸುತ್ತದೆ.
ರೈತರ ಮೇಲಿನ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು ಮತ್ತು ಹೆಚ್ಚುತ್ತಿರುವ ಕೃಷಿ ಇನ್ಪುಟ್ ವೆಚ್ಚವನ್ನು ನಿಭಾಯಿಸಲು, ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) (RBI)ಅಸುರಕ್ಷಿತ ಕೃಷಿ ಸಾಲದ ಮಿತಿಯನ್ನು 1.6 ಲಕ್ಷ ರೂ.ಗಳಿಂದ 2 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ.
ಜನವರಿ 1, 2025 ರಿಂದ ಜಾರಿಗೆ ಬರಲಿರುವ ಪರಿಷ್ಕೃತ ಮಿತಿಯು ದೇಶಾದ್ಯಂತ ಲಕ್ಷಾಂತರ ರೈತರಿಗೆ ಪ್ರಯೋಜನವನ್ನು ನೀಡುವ ನಿರೀಕ್ಷೆಯಿದೆ ಎಂದು ಕೃಷಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಕೃಷಿ ಕ್ಷೇತ್ರದ ಮೇಲೆ ಹಣದುಬ್ಬರದ ಒತ್ತಡಗಳು ಪರಿಣಾಮ ಬೀರುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರೈತ ಸಮುದಾಯದ ಶೇ. 86 ಕ್ಕಿಂತ ಹೆಚ್ಚು ಪಾಲನ್ನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರು ಸಾಲ ಪಡೆಯಲು ಕಷ್ಟಪಡುತ್ತಾರೆ. ಸಾಲದ ಮಿತಿಯನ್ನು ಹೆಚ್ಚಿಸುವ ಮೂಲಕ, ಸೀಮಿತ ಆಸ್ತಿಗಳನ್ನು ಹೊಂದಿರುವ ರೈತರಿಗೆ ನಿರ್ಣಾಯಕ ಜೀವನಾಡಿಯನ್ನು ಒದಗಿಸುವ ಮೂಲಕ, ಮೇಲಾಧಾರ ಹೊರೆಯಿಲ್ಲದೆ ಸಾಲದ ಪ್ರವೇಶವನ್ನು ಬಲಪಡಿಸುವ ಗುರಿಯನ್ನು ರಿಸರ್ವ್ ಬ್ಯಾಂಕ್ ಹೊಂದಿದೆ.
ಹೊಸ ಮಿತಿಯನ್ನು ಸಂಬಂಧಿತ ಚಟುವಟಿಕೆಗಳಿಗೆ ಸಾಲಗಳಿಗೆ ವಿಸ್ತರಿಸಲಾಗಿದೆ, ಇದು ರೈತರಿಗೆ ತಮ್ಮ ಆದಾಯದ ಹರಿವನ್ನು ವೈವಿಧ್ಯಗೊಳಿಸಲು ಅವಕಾಶಗಳನ್ನು ಒದಗಿಸುತ್ತದೆ. ಪರಿಷ್ಕೃತ ಮಿತಿಯೊಳಗೆ ಸಾಲಗಳಿಗೆ ಮೇಲಾಧಾರ ಮತ್ತು ಮಾರ್ಜಿನ್ ಅವಶ್ಯಕತೆಗಳನ್ನು ಮನ್ನಾ ಮಾಡುವಂತೆ ಬ್ಯಾಂಕುಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ರೈತರಿಗೆ ಸಕಾಲಿಕ ನೆರವು ದೊರೆಯುವಂತೆ ನೋಡಿಕೊಳ್ಳಲು ಪರಿಷ್ಕೃತ ಮಾರ್ಗಸೂಚಿಗಳ ಅನುಷ್ಠಾನವನ್ನು ತ್ವರಿತಗೊಳಿಸುವಂತೆ ರಿಸರ್ವ್ ಬ್ಯಾಂಕ್ ಬ್ಯಾಂಕುಗಳನ್ನು ಒತ್ತಾಯಿಸಿದೆ.
ಕಿಸಾನ್ ಕ್ರೆಡಿಟ್ ಕಾರ್ಡ್(Kisan credit card)
ಈ ಉಪಕ್ರಮದ ಪರಿಣಾಮವನ್ನು ಹೆಚ್ಚಿಸಲು, ಬ್ಯಾಂಕುಗಳು ರೈತರು ಮತ್ತು ತಮ್ಮ ಕಾರ್ಯಾಚರಣೆಯ ಕ್ಷೇತ್ರಗಳಲ್ಲಿನ ಇತರ ಪಾಲುದಾರರನ್ನು ಗುರಿಯಾಗಿಸಿಕೊಂಡು ಜಾಗೃತಿ ಅಭಿಯಾನಗಳನ್ನು ಪ್ರಾರಂಭಿಸುತ್ತವೆ. ಹಣಕಾಸಿನ ಬೆಂಬಲ ಕಾರ್ಯವಿಧಾನಗಳನ್ನು ಸುಧಾರಿಸುವತ್ತ ಗಮನ ಹರಿಸಲಾಗುವುದು, ವಿಶೇಷವಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಬಳಕೆಯನ್ನು ಹೆಚ್ಚಿಸುವುದು.
ಈ ಕ್ರಮವು ಮಾರ್ಪಡಿಸಿದ ಬಡ್ಡಿ ಸಬ್ಸಿಡಿ ಯೋಜನೆ (MISS) ನಂತಹ ಸರ್ಕಾರಿ ಉಪಕ್ರಮಗಳಿಗೆ ಅನುಗುಣವಾಗಿದೆ, ಇದು ತಕ್ಷಣದ ಪಾವತಿದಾರರಿಗೆ 4% ಸಬ್ಸಿಡಿ ಬಡ್ಡಿದರದಲ್ಲಿ 3 ಲಕ್ಷ ರೂ.ಗಳವರೆಗೆ ಸಾಲವನ್ನು ಒದಗಿಸುತ್ತದೆ. ಒಟ್ಟಾರೆಯಾಗಿ, ಈ ಕ್ರಮಗಳು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಮತ್ತು ಗ್ರಾಮೀಣ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ವಿಶಾಲವಾದ ಕಾರ್ಯತಂತ್ರದ ಭಾಗವಾಗಿದೆ.
ರಿಸರ್ವ್ ಬ್ಯಾಂಕಿನ ಈ ನಿರ್ಧಾರವನ್ನು ಆರ್ಥಿಕ ಸೇರ್ಪಡೆಯತ್ತ ಒಂದು ಮಹತ್ವದ ಹೆಜ್ಜೆ ಎಂದು ತಜ್ಞರು ಶ್ಲಾಘಿಸಿದ್ದಾರೆ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ, ಮೇಲಾಧಾರ ಅವಶ್ಯಕತೆಗಳನ್ನು ತೆಗೆದುಹಾಕುವುದು ಪರಿವರ್ತನಾತ್ಮಕವಾಗಿರುತ್ತದೆ, ಇದು ಅವರ ಕಾರ್ಯಾಚರಣೆಗಳಲ್ಲಿ ಹೆಚ್ಚಿನ ವಿಶ್ವಾಸ ಮತ್ತು ಹೂಡಿಕೆಯನ್ನು ಸಕ್ರಿಯಗೊಳಿಸುತ್ತದೆ ಎಂದು ಸರ್ಕಾರದ ಕೃಷಿ MSP ಸಮಿತಿಯ ಸದಸ್ಯ ಬಿನೋದ್ ಆನಂದ್ ಹೇಳಿದರು. ಹೆಚ್ಚಿದ ಸಾಲ ಮಿತಿಯು ಕೃಷಿ ವಲಯವನ್ನು ಬಲಪಡಿಸುವುದಲ್ಲದೆ, ಗ್ರಾಮೀಣ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
Bele sala status-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ-crop loan status
ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್(Survey number) ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.
ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ(Bele sala) ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.
ಸಾಲ(crop loan status)ವಿವರ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು
https://landrecords.karnataka.gov.in/Service2/
ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ.
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಇದನ್ನೂ ಓದಿ
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427
ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ. ಎಂಬ ಮಾಹಿತಿ ಇರುತ್ತದೆ.
ಈ ಮಾಹಿತಿ ರೈತರಿಗೆ ತುಂಬಾ ಅನುಕೂಲವಾಗಿದೆ ಸರ್ವೇ ನಂಬರ್ ನಮೂದಿಸಿದರೆ ಸಾಕು ರೈತರು ದೇಶದ ಯಾವುದೇ ಮೂಲೆಯಿಂದಲೂ ಮಾಹಿತಿ ಪಡೆಯಬಹುದು. ಕೇವಲ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವ ಮಾಹಿತಿ ಎಲ್ಲವೂ ರೈತರಿಗೆ ಸಿಗಲಿದೆ.
2024-25 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(Pradan mantri fasal bheema yojane) ಯೋಜನೆಯಡಿ ಒಟ್ಟು 21,786 ರೈತರಿಗೆ ರೂ. 30.05 ಕೋಟಿ ಬೆಳೆವಿಮೆ(Belevime) ಪರಿಹಾರ ಮಂಜೂರಾಗಿದ್ದು, ಹಂತ ಹಂತವಾಗಿ ರೈತರ ಖಾತೆಗೆ ಬೆಳೆವಿಮೆ ಪರಿಹಾರ ಜಮಾ ಆಗುವುದು ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು ತಿಳಿಸಿದ್ದಾರೆ.
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಬೆಳೆವಿಮೆ ಹಣ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಸಂಜೆ, ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಜೆ ರಾತ್ರಿ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಸೆಖೆ, ಮೋಡ ಹಾಗೂ ಸಂಜೆ, ರಾತ್ರಿಯ ವೇಳೆ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಸಂಜೆಯ ನಂತರ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಹೆಚ್ಚಿನ ಭಾಗಗಳಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಲೆನಾಡು ಭಾಗಗಳಲ್ಲಿ ಸಂಜೆ, ರಾತ್ರಿಯ ವೇಳೆ ಮಳೆ ಮುಂದುವರಿಯುವ ಲಕ್ಷಣಗಳಿವೆ
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಅಲ್ಲಲ್ಲಿ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ ಕರಾವಳಿಯಲ್ಲಿ ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
]]>*ಸಮಗ್ರ ಕೃಷಿ ತರಬೇತಿ*
ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ 13 ದಿನಗಳ ಹೈನುಗಾರಿಕೆ, ಕುರಿ ಸಾಕಾಣಿಕೆ, ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಯನ್ನು ದಿನಾಂಕ 15.4.2025 ರಿಂದ 27.4.2025 ರ ವರೆಗೆ ಊಟ ವಸತಿಯೊಂದಿಗೆ ಉಚಿತವಾಗಿ ನೀಡಲಾಗುವುದು
ಆಸಕ್ತಿಯುಳ್ಳ ಅಭ್ಯರ್ಥಿಗಳು ಕೂಡಲೇ ಕೆಳಗಿನ ಸಂಖ್ಯೆಗೆ ಕರೆ ಮಾಡಿರಿ
9110865650
ತರಬೇತಿಯಲ್ಲಿ ಕಲಿಸುವ ವಿಷಯಗಳು::
1. ಹೈನುರಾಸುಗಳ ತಳಿಗಳು (Dairy breeds),ಕುರಿ ತಳಿಗಳು(Sheep breeds)
2. ರೋಗಗಳು ಮತ್ತು ಅದರ ಲಕ್ಷಣಗಳು(Disease and their symptoms)
3. ರೋಗಗಳನ್ನು ತಡೆಗಟ್ಟುವ ಕ್ರಮಗಳು(controlling measures)
4. ಕೃತಕ ಗರ್ಭಧಾರಣೆ (Artificial Insemination)
5. ಮೇವಿನ ವಿಷಯಗಳು(Fodder)
6. ಎರೆಹುಳು ಗೊಬ್ಬರ ತಯಾರಿಕೆ (Vermicompost)
7. ಎರೆಹುಳು ನಿರ್ವಹಣೆ(Vermicompost management)
8. ಸಾವಯುವ ಕೃಷಿ ಪದ್ಧತಿಯ ಅರಿವು (Importantance of organic farming)
9. ಸಮಯದ ನಿರ್ವಹಣೆ, ಸ್ವ ಉದ್ಯೋಗದ ಮಹತ್ವ, ಸಂವಹನ ಕೌಶಲ್ಯ, ಬ್ಯಾಂಕಿಂಗ್ ವಿಷಯ ಮತ್ತು ಇನ್ನೂ ಇತರೆ ವಿಷಯಗಳ ಬಗ್ಗೆ ತಿಳುವಳಿಕೆ ನೀಡಲಾಗುವುದು.(Bank and subsidy schemes) ಇನ್ನು ಇತರೆ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು
ಆಸಕ್ತರು ಕೂಡಲೇ ಕೆಳಗಡೆ ನಮೂದಿಸಿದ ಮೊಬೈಲ್ ನಂಬರ್ ಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಿ
8660219375
ಬೆಳೆ ಪರಿಹಾರದಲ್ಲಿ(Bele parihara) ಬೆಳೆ ಸಮೀಕ್ಷೆ(crop survey) ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ(Fruits portal) ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ(crop loss compensation)ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ(DBT) ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2024-25 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್(Survey number) ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.
ಬೆಳೆಹಾನಿ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/FarmerDeclarationReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ ವಿಕ್ಷಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ FID ಇರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಸಿಗಲಿದೆ
FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.
ಏನಿದು ಫ್ರೂಟ್ಸ್ ನಂಬರ್
ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.
ನೋಂದಣಿ ಹೇಗೆ?
ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.
ಏಕೆ ನೋಂದಾಯಿಸಬೇಕು?
ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್ ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ
ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.
ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.
ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು
]]>2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ: 08/04/2025 ರ ಮಧ್ಯಾಹ್ನ 12.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.
ಫಲಿತಾಂಶ ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ Registration ನಂಬರ್ ಹಾಕಿ,Subject Select ಮಾಡಿ Submit ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಫಲಿತಾಂಶ ದೊರೆಯಲಿದೆ
2nd puc result 2025 website
gov
karresults.nic.in2025
karresults.nic.in or
2nd puc result 2025 karnataka link
karresults. nic. in 2025
pue.karnataka.gov.in
kea result 2025
kseeb 2nd puc result 2025
when was 2nd puc result
12 puc result
2nd pu result 2025
12 puc result 2025 karnataka
2nd puc result date 2025
karnataka 2nd puc results 2025
karresults-nic
karresults-nic-in sslc results
2nd puc 2025 result
karresults.nic.in, kseab.karnataka.gov.in
2025 2nd puc result date
pu results
puc 2 result 2025 karnataka
when 2nd puc result 2025
2nd puc result website
sslc result 2025 date in karnataka
karresult.nic.in 2025
karnataka 2nd puc result 2025 date
when is 2nd puc result 2025
kseab.karnataka.gov.in or karresults.nic.in
karnataka 2nd puc result 2025 website
karresults.nic.in or kseab.karnataka.gov.in
when is 2nd puc result
karresults.nic in
kseeb.kar.nic.in 2025
2nd puc result date
2nd puc result karnataka
https //karresults.nic.in 2024
karresults.nic.in and kseab.karnataka.gov.in.
2puc results 2025 karnataka
karresults-nic-in 2025 puc
https karresults-nic-in
karresults-nic-in 2025 1st puc
karresults nic in puc results 2025
karnataka.gov.in puc
https karresults nic in 2024 2nd puc
2nd puc karnataka result
karresults-nic-in 2025
karresults.nic.in 2nd puc 2025
2nd puc result 2025
https //karresults.nic.in 2025
2nd puc result 2025 link karnataka
kseab.karnataka.gov.in puc
karresults.nic.in
karresults
puc result 2025
www.karresults.nic.in 2025
karresults.nic.in 2025
kseab karnataka gov in 2025
puc result 2025 karnataka
karresults nic in puc
puc result
karresults-nic-in 2025 2nd puc
2nd puc result 2025 link
karnataka 2nd puc result 2025
kseab.karnataka.gov.in
2puc results 2025
second puc result 2025
2nd puc result
karresults nic in 2025 puc results
12 puc result 2025
https //karresults.nic.in
kar results.nic.in
karresults nic in
2nd puc result 2025 karnataka
www.kar.nic.in 2025
kseab
karresults.nic.in.
krresults.nic.in 2025
2nd puc result link
kseeb karnataka gov in
karresults.nic.in or kseab.karnataka.gov.in/english
kseeb
kseeb 2nd puc result
karresults nic karnataka 2nd puc results
https //kseab.karnataka.gov.in login
karresults nic in 2025
2nd puc result 2025 date and time
karnataka 2nd puc results
2nd puc results
karresults.nic
2nd puc result 2025 date
karresults-nic-in 2025 puc results
puc result 2025 link
https karresults nic in 2025
puc result 2025 karnataka link
karnataka 2nd puc result
www.karresults.nic.in
result of 2nd puc 2025
2 nd pu result
karresults.nic.in and kseab.karnataka.gov.in
karnataka examination result 2025
2puc results 2025 date
kseab.karnataka.gov.in/english
2nd puc result link 2025
puc results
karresults.nic.in or kseab.karnataka.gov.in/english.
karresults-nic-in 2024
karesults.nic.in 2025
puc
pu result 2025
kseab.karnataka.gov.in.
how to check 2nd puc result
kar.results.nic.in 2025
2nd pu result
kseeb-kar-nic-in
kar results.nic.in 2025
karnataka
karresults.nic.in,
https karresults-nic-in 2025
karnataka 2nd puc result 2025 link
kseab.karnataka.gov.in 2025
karresults.nic.in.2025
karnataka school examination and assessment board
karresults nic in 2025 link
kseab.karnataka.gov.in puc 2024-25
2nd puc results 2025
karresults. nic. in
karresults.nic.in 2nd puc
kar.nic.in 2025
karnataka puc results 2025 date
kar results
second puc result 2025 karnataka
karresult.nic.in
puc result 2025 date
karnataka puc result 2025
pu results 2025 karnataka
kseab.karnataka.gov.in/english.
2puc results
when is 2nd puc exam 2025
@karresults.nic.in
kseab karnataka gov in
kseeb.karnataka.gov.in
2nd puc result 2024
kar results nic in
live
karnataka puc result
12 puc result 2025 link
2puc result
karresults.nic.
2025 2nd puc result
2nd puc result 2025 time
karresults.nic.in:
karresults.nic.in 2025 puc results
https karresults-nic-in 2023
karresults nic in 2025 sslc results
karresults.nic.in 2025 puc results date
when is 2nd puc result 2025 in karnataka
puc 2 result 2025
karresults.nic.in. 2025
results
second puc result 2025 link
2puc results 2025 date karnataka
https karresults nic in 2025 2nd puc
puc results 2025
karnataka result 2nd puc 2025
2 puc result
karnic puc result 2025
ii puc results 2025
pu result
karnataka result
2nd puc
2nd puc result 2025 kannada
karresults.nic.in 2nd puc 2024
karresults.nic.in 2020 puc results date
when 2nd puc result 2025?
karnataka 2nd puc result 2025 check online
2nd puc result 2025 link karnataka online
nic
kar result
karnataka examination result
second puc result
puc result 2024
2nd year result
karnataka puc results 2025
2nd pu results
how to check 2nd puc result 2025
12th result date 2025 karnataka
kar result.nic.in
kseeb result 2025
puc result 2025 karnataka date
https//karresults.nic.in
www-karresults-nic-in 2025
puc result link
karresults nic
karnataka results
2nd pu result link
2pu result 2025
https//karresults.nic.in 2025
karresults.nic.in and pue.kar.nic.in
www.karresults.nic.in 2024
@karresults.nic.in:
second puc result 2025 date
karresults-nic-in 2025 link
karnataka result 2025
2nd puc result link 2025 karnataka
]]>ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಈಗಾಗಲೇ ಘಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣ ಕೂಡ ಬಿಡುಗಡೆಯಾಗಿದ್ದು, ಶೀಘ್ರವೇ ಜಮೆಯಾಗಲಿದೆ.” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂ
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್(Gram one online application) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಟಾನಗೊಳಿಸುತ್ತಿದ್ದು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.15 ಕಡೆಯ ದಿನವಾಗಿದ್ದು ಆಸಕ್ತಿವುಳ್ಳವರು ಅರ್ಜಿಗಳನ್ನು https://www.karnatakaone.gov.in/Public/GramOneFrachiseeTerms ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು ಹಾಗೂ ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಗ್ರಾಮಓನ್ ನಲ್ಲಿ ಸಿಗುವ ಸೇವೆಗಳು ಹಾಗೂ ಅದಕ್ಕೆ ಬೇಕಾದ ದಾಖಲೆಗಳ ಪಟ್ಟಿಯನ್ನು ಈ ಕೆಳಗಿನ PDF ಮೂಲಕ ಡೌನ್ಲೋಡ್ ಮಾಡಿಕೊಳ್ಳಿ
]]>ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ ಹಸುಗಳಿಗೆ ಘಟಕ ವೆಚ್ಚದ ಶೇ.50 ರಷ್ಟು ಅಥವಾ ಗರಿಷ್ಟ 1.25 ಲಕ್ಷ ರೂ. ಸಹಾಯಧನ
ಉಚಿತ ಹಾಲು ಕರೆಯುವ ಯಂತ್ರ,ರಬ್ಬರ್ ಮ್ಯಾಟ್,ಸೈಲೆಜ್ ಬ್ಯಾಗ್ ವಿತರಣೆಗೆ ಅರ್ಜಿ ಆಹ್ವಾನ-Free milking machine,cow mat,silage bag
2024-25 ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿಯಲ್ಲಿ ಹಾಲು ಕರೆಯುವ ಯಂತ್ರ(Milking machine), ರಬ್ಬರ್ ನೆಲಹಾಸು(Rubber mat) ಹಾಗೂ ಸೈಲೇಜ್ ಬ್ಯಾಗ್ಗಳನ್ನು(Silage bag) ವಿತರಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ(Vetarnary department)ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಾಲು ಕರೆಯುವ ಯಂತ್ರ ತಲಾ 1 ರಂತೆ, ರಬ್ಬರ್ ನೆಲಹಾಸು ತಲಾ 2 ರಂತೆ ಹಾಗೂ ಸೈಲೇಜ್ ಬ್ಯಾಗ್ ತಲಾ 100 ಕೆಜಿ ಸಾಮರ್ಥ್ಯದ 1 ಹಾಗೂ 500 ಕೆಜಿ ಸಾಮರ್ಥ್ಯದ 1 ಬ್ಯಾಗ್ ಅನ್ನು ನೀಡಲಾಗುತ್ತದೆ. ಸದರಿ ಫಲಾನುಭವಿಗಳ ಆಯ್ಕೆಯಲ್ಲಿ ರೋಸ್ಟರ್ ನಿಯಾಮಾನುಸಾರದ ಕ್ರಮ ವಹಿಸಲಿದ್ದು, ಆಸಕ್ತರು ತಮ್ಮ ಸ್ಥಳೀಯ ಪಶುವೈದ್ಯಾಧಿಕಾರಿಗಳಿಂದ/ಮುಖ್ಯ ಪಶುವೈದ್ಯಾಧಿಕಾರಿಗಳು ಇವರಿಂದ ಅರ್ಜಿ ನಮೂನೆಯನ್ನು ಪಡೆದು ಎಲ್ಲಾ ದಾಖಲಾತಿಗಳೊಂದಿಗೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮುಖ್ಯ ಪಶು ವೈದ್ಯಾಧಿಕಾರಿಗಳ ಈ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು(Cow) ಅಥವಾ ಎಮ್ಮೆ(Buffelow) ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.
ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
Vetarnary department schemes 2025-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ
ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahvs.karnataka.gov.in/info-2/Schemes+&+Benefits/kn
National livestock mission 2024-ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆ,ಕುರಿ,ಕೋಳಿ,ಮೇಕೆ,ಹಂದಿ ಸಾಕಾಣೆಕೆಗೆ ಅರ್ಜಿ ಆಹ್ವಾನ
ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ, ಮೇಕೆ, ಹಂದಿ ಸಾಕಾಣಿಕೆ ಮತ್ತು ರಸಮೇವು ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.
National livestock mission
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ
(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)
ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.
ಅವಶ್ಯಕ ದಾಖಲಾತಿಗಳು :-
1)ಆಧಾರ,
2)ಪಹಣಿ ಪತ್ರ
3)ಬ್ಯಾಂಕ್ಖಾತೆ ಸಂಖ್ಯೆ,
ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು
4)ಭಾವ ಚಿತ್ರ.
ಕ್ರ.ಸಂ |
ಘಟಕ |
ಸೌಲಭ್ಯಗಳ ವಿವರ |
|
ಹೈನುಗಾರಿಕೆ |
|
1 |
ಮಿಶ್ರತಳಿ ದನಗಳ ನಿರ್ವಹಣೆ (1+1) |
ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ |
|
ಆ. ಸುಧಾರಿತ ಎಮ್ಮೆಗಳ ನಿರ್ವಹಣೆ |
ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ |
|
ಕುರಿ ಸಾಕಾಣಿಕೆ |
|
2 |
ಕುರಿಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ |
|
ಕುರಿಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (10) |
ರೂ. 13,000 ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (20) |
ರೂ. 26,000 ರಂತೆ ಸಾಲ ಸೌಲಭ್ಯ |
|
ಮೇಕೆ ಸಾಕಾಣಿಕೆ |
|
3 |
ಮೇಕೆಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ |
|
ಮೇಕೆಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ |
4 |
ಹಂದಿ ಸಾಕಾಣಿಕೆ (10) |
ರೂ,60,000 ರಂತೆ ಸಾಲ ಸೌಲಭ್ಯ |
|
ಕೋಳಿ ಸಾಕಾಣಿಕೆ |
|
5 |
ಮಾಂಸದ ಕೋಳಿ ಸಾಕಾಣಿಕೆ |
2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ |
|
ಮೊಟ್ಟೆ ಕೋಳಿ ಸಾಕಾಣಿಕೆ |
1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ |
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.
ಈ ಮಾಹಿತಿ ನಿಮಗೆ ಉಪಯೋಗವಾಗಿದ್ದರೆ ಬೇರೆಯವರಿಗೂ ಹಂಚಿಕೊಳ್ಳಿ ಧನ್ಯವಾದಗಳು
]]>ರಾಜ್ಯದ 222 ಗ್ರಾಮ ಪಂಚಾಯಿತಿ ಉಪ ಚುನಾವಣೆ ದಿನಾಂಕ ಘೋಷಣೆ: ಮೇ 11ರಂದು ಮತದಾನ, 14ರಂದು ಫಲಿತಾಂಶ ಪ್ರಕಟ
ರಾಜ್ಯದ 222 ಗ್ರಾಮ ಪಂಚಾಯಿತಿಗಳ 260 ಸ್ಥಾನಗಳಿಗೆ ಉಪಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ.
ಏಪ್ರಿಲ್ 22 ರಂದು ರಾಜ್ಯ ಚುನಾವಣಾ ಆಯೋಗದಿಂದ ಅಧಿಸೂಚನೆ ಪ್ರಕಟಿಸಲಾಗುವುದು. ಮೇ 11ರಂದು ಮತದಾನ, ಮೇ 14ರಂದು ಫಲಿತಾಂಶ ಪ್ರಕಟವಾಗಲಿದೆ.
ವಿವಿಧ ಕಾರಣಗಳಿಂದಾಗಿ ತೆರವಾಗಿರುವ 222 ಗ್ರಾಮ ಪಂಚಾಯಿತಿಗಳ 260 ಸ್ಥಾನಗಳಿಗೆ ಉಪಚುನಾವಣೆ ನಡೆಸಲಾಗುವುದು.
Voter ID-ನಿಮ್ಮ ಮೊಬೈಲ್ ನಲ್ಲೇ ಬದಲಾದ ಮೊಟರ್ ಐಡಿ ಡೌನ್ಲೊಡ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-205
ಇದಕ್ಕಾಗಿ ಚುನಾವಣಾ ಆಯೋಗದಿಂದ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೇ 11ರಂದು ಮತದಾನ, ಮೇ 14ರಂದು ಫಲಿತಾಂಶ ಪ್ರಕಟಿಸಲಾಗುವುದು. ಇದಕ್ಕೆ ಪೂರ್ವಭಾವಿಯಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಏಪ್ರಿಲ್ 22ರಂದು ಅಧಿಸೂಚನೆ ಹೊರಡಿಸಲಾಗುವುದು ಎನ್ನಲಾಗಿದೆ.
.Polling booth-ನಿಮ್ಮ ಮತಗಟ್ಟೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-207
ಕರ್ನಾಟಕದ ಮತದಾರರ ವಿವರ (Karnataka Voter Details)ಕರ್ನಾಟಕ ಒಟ್ಟು 5.3 ಕೋಟಿ ಮತದಾರರನ್ನು ಹೊಂದಿದ್ದು, ಇದರಲ್ಲಿ 2.62 ಕೋಟಿ ಪುರುಷ ಮತದಾರರು ಇದ್ದರೆ, 2.59 ಕೋಟಿ ಮಹಿಳಾ ಮತದಾರರು ಇದ್ದಾರೆ. ಮತದಾರರ ಲಿಂಗಾನುಪಾತ ಗಮನಿಸಿದರೆ ಪ್ರತಿ ಸಾವಿರ ಪುರುಷ ಮತದಾರರಿಗೆ 988 ಮಹಿಳಾ ಮತದಾರರಿದ್ದಾರೆ.
Voter list-ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ceo.karnataka.gov.in/draftroll_2023/
ನಂತರ ನಿಮ್ಮ ಜಿಲ್ಲೆಯನ್ನು ಕ್ಲಿಕ್ ಮಾಡಿ
ನಂತರ ನೀವು ಮತ ಹಾಕುವ ಬೂತ ಮೇಲೆ ಕ್ಲಿಕ್ ಮಾಡಿ
ಕೆಳಗೆ ಕಾಣುವ captch ಮೇಲೆ ಕ್ಲಿಕ್ ಮಾಡಿ Download ಮೇಲೆ ಕ್ಲಿಕ್ ಮಾಡಿದರೆ,ನಿಮ್ಮ ಬೂತನಲ್ಲಿರುವ ಎಲ್ಲಾ ಮತದಾರರ ಪಟ್ಟಿ ಸಿಗುತ್ತದೆ. ಇದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ.
ನಿಮ್ಮ ಹೆಸರು ಇಲ್ಲದಿದ್ದರೆ ಕೂಡಲೆ ನಿಮ್ಮ ಗ್ರಾಮ ಲೆಕ್ಕಾಧಿಕಾರಿಯನ್ನು ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಸೇರಿಸಿ
ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs
http://krushirushi.in/Krushi-
ಇಂತಿ ನಿಮ್ಮ
ಶಿವನಗೌಡ ಪಾಟೀಲ
M.Sc(ಕೃಷಿ), ಕೀಟಶಾಸ್ತ್ರ
]]>
ಸೂಕ್ಷ್ಮ (ತುಂತುರು) ನೀರಾವರಿಗೆ(Micro irrigation)ಸಹಾಯಧನದಡಿ ಪರಿಕರಗಳನ್ನು ಪಡೆಯಲಿದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿ, ಎಲ್ಲ ವರ್ಗದ ರೈತರಿಗೆ ಸಬ್ಸಿಡಿ ನವೀಕರಣ ಸೌಲಭ್ಯ ವಿಸ್ತರಿಸಿ ಆದೇಶಿಸಿದೆ. ಪರಿಶಿಷ್ಟ ಜಾತಿ, ಪಂಗಡಗಳ ರೈತ ಫಲಾನುಭವಿಗಳು ಏಳು ವರ್ಷಗಳ ನಂತರ ಅದೇ ಜಮೀನಿಗೆ ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.
ಇದೀಗ ಇತರ ವರ್ಗಗಳ ರೈತರಿಗೂ ಸರ್ಕಾರ ವಿಸ್ತರಿಸಿದೆ. ಈ ಹಿಂದೆ ಇತರ ವರ್ಗದ ರೈತರಿಗೆ ಒಮ್ಮೆ ಮಾತ್ರ ಒಂದು ನಿರ್ದಿಷ್ಟ ಜಮೀನಿಗೆ ಹನಿ ನೀರಾವರಿ(Drip irrigation), ತುಂತುರು ನೀರಾವರಿ(Sprinkler irrigation)ಘಟಕ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಸಚಿವರ ಪ್ರಯತ್ನ ಫಲಪ್ರದ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ರಾಜ್ಯ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಎಲ್ಲ ಜಿಲ್ಲೆಗಳ ರೈತರು ಇತರೆ ವರ್ಗಗಳ ರೈತರಿಗೆ ವಿಧಿಸಿರುವ ನಿರ್ಬಂಧ ಸಡಿಲಿಸಲು ಪದೇಪದೆ ವಿನಂತಿಸಿದ್ದರು. ಈ ಮನವಿಯನ್ನು ಎನ್.ಚಲುವರಾಯಸ್ವಾಮಿ ಗಂಭೀರವಾಗಿ ಪರಿಗಣಿಸಿದ್ದರು. ನಿರಂತರ ಪ್ರಯತ್ನ ಕೊನೆಗೂ ಫಲಪ್ರದವಾಗಿದೆ. ಇತರೆ ವರ್ಗಗಳ ರೈತರ ಮೇಲಿನ ನಿರ್ಬಂಧ ಸಡಿಲಿಸಿ, ಏಳು ವರ್ಷಗಳ ನಂತರ ಮತ್ತದೇ ಜಮೀನಿಗೆ ಸಬ್ಸಿಡಿ ನವೀಕರಣದ ಅವಕಾಶದ ಆದೇಶ ಹೊರಬಿದ್ದಿದೆ. ಕೇಂದ್ರ ಸರ್ಕಾರವು ರಾಷ್ಟ್ರೀಯ ಕೃಷಿ ಯೋಜನೆಯಡಿ ಒಂಭತ್ತು ಘಟಕಗಳನ್ನು ಸೇರ್ಪಡೆಗೊಳಿಸಿ ಪ್ರಧಾನಮಂತ್ರಿ ರಾಷ್ಟ್ರೀಯ ವಿಕಾಸ ಯೋಜನೆ (ಪಿಎಂ-ಆರ್ಕೆವಿವೈ) ಎಂದು ಮರು ನಾಮಕರಣ ಮಾಡಿದೆ. ಇದರ ವ್ಯಾಪ್ತಿಗೆ ಒಳಪಡಿಸುವಂತೆ ರೈತರಿಗೆ ಸೌಲಭ್ಯ ಪಡೆಯಲು ಅವಕಾಶ ನೀಡಿ ಆದೇಶಿಸಿದೆ.
2.60 ಲಕ್ಷ ರೈತರಿಗೆ ಅನುಕೂಲ: ಪಿಎಂಕೆಎಸ್ಐ(PMKSY)ಮತ್ತು ಪಿಎಂಎಂಎಸ್(PMMS) ಯೋಜನೆಯಡಿ ಸೂಕ್ಷ್ಮ ನೀರಾವರಿ ಯೋಜನೆಗೆ 274 ಕೋಟಿ ರೂ. ಮೀಸಲಿರಿಸಲಾಗಿತ್ತು. ಇದರಿಂದ 2.60 ಲಕ್ಷ ರೈತರಿಗೆ ಅನುಕೂಲ ತಲುಪಲಿದೆ. ಅಲ್ಲದೆ ಟಾಪ್ಅಪ್ ಯೋಜನೆಯಡಿ ಸೂಕ್ಷ್ಮ ನೀರಾವರಿ ಪರಿಕರಗಳಿಗೆ ಆರ್ಥಿಕ ನೆರವು ಒದಗಿಸಲು 252 ಕೋಟಿ ರೂ. ಅನುದಾನವನ್ನು ನೀಡಲಾಗಿದೆ. ಸುಸ್ಥಿರ ಕೃಷಿ ಅಭಿವೃದ್ಧಿ, ಯಾಂತ್ರೀಕರಣ ಮತ್ತು ಡಿಜಿಟಿಲೀಕರಣ, ಪ್ರತಿ ಹನಿ ನೀರು ಪರಿಣಾಮಕಾರಿ ಬಳಕೆ ಮುಂತಾದ ಉದ್ದೇಶಗಳನ್ನು ಪಿಎಂ-ಆರ್ಕೆವಿವೈ ಒಳಗೊಂಡಿದೆ.
ವಿಸ್ತೃತ ಯೋಜನಾ ವರದಿ, ಮಣ್ಣಿನ ಆರೋಗ್ಯ ನಿರ್ವಹಣೆ, ಮಳೆಯಾಶ್ರಿತ ಪ್ರದೇಶದ ಅಭಿವೃದ್ಧಿ, ಕೃಷಿ ಅರಣ್ಯ, ಪಾರಂಪರಿಕ ಕೃಷಿ, ಕೃಷಿ ಯಾಂತ್ರೀಕರಣ, ಪ್ರತಿ ಹನಿಗೂ ಹೆಚ್ಚಿನ ಬೆಳೆ, ಬೆಳೆ ಉಳಿಕೆ ನಿರ್ವಹಣೆ, ಬೆಳೆ ವೈವಿಧ್ಯಕರಣ, ಕೃಷಿ ನವೋದ್ಯಮಗಳಿಗೆ ವೇಗವರ್ಧಕ ನಿಧಿ ಘಟಕಗಳನ್ನು ಈ ಯೋಜನೆಯಡಿ ವಿಲೀನಗೊಳಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 60:40 ಅನುಪಾತದಡಿ ಯೋಜನಾ ವೆಚ್ಚವನ್ನು ಭರಿಸಲಿದೆ. ಸೂಕ್ಷ್ಮ ನೀರಾವರಿಗೆ ಪ್ರೋತ್ಸಾಹಿಸಲೆಂದು ರೈತರಿಗೆ ಸಬ್ಸಿಡಿ ಸೌಲಭ್ಯ ಕಲ್ಪಿಸಲಾಗಿದೆ.
ಪಿಎಂ-ಆರ್ಕೆವಿವೈಯಡಿ(PM-RKVY) 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರ 582.24 ಕೋಟಿ ರೂ. ಆರಂಭಿಕ ಹಂಚಿಕೆ ಮಾಡಿತ್ತು. ನಂತರ 761.89 ಕೋಟಿ ರೂ.ಗಳಿಗೆ ಏರಿಸಿದ್ದು, ಹೆಚ್ಚುವರಿ ಮೊತ್ತದ ಪೈಕಿ ಕೃಷಿ ಯಾಂತ್ರೀಕರಣ ಮತ್ತು ಉಳಿಕೆ ಬೆಳೆ ನಿರ್ವಹಣೆಗೆ 120 ಕೋಟಿ ರೂ., ಮಣ್ಣಿನ ಆರೋಗ್ಯ- 12 ಕೋಟಿ ರೂ., ವಿಸ್ತೃತ ಯೋಜನಾ ವರದಿ ಘಟಕಕ್ಕೆ 46.65 ಕೋಟಿ ರೂ. ಸೇರಿತ್ತು. ಯೋಜನೆಯಡಿ 526.75 ಕೋಟಿ ರೂ., 2024-25ನೇ ವರ್ಷಕ್ಕೆ ಹಂಚಿಕೆಯಾದ ಮೊತ್ತದಲ್ಲಿ 326.02 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ಸೂಕ್ಷ್ಮ ನೀರಾವರಿಗೆ ಸಬ್ಸಿಡಿ ಸೌಲಭ್ಯವೆಷ್ಟು?
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Aadhaar number/ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ Aadhaar number/ಆಧಾರ್ ಸಂಖ್ಯೆ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮ್ಮ ಆಧಾರ್ ನಂಬರ್ ನ ಕೊನೆಯ 4 ಸಂಖ್ಯೆ ಒಂದೆೇ ಇರುವ ಎಲ್ಲಾ ರೈತರ ಪಟ್ಟಿ ಸಿಗಲಿದೆ.ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಲು Search ಬಾಕ್ಸನಲ್ಲಿ ನಿಮ್ಮ ಹೆಸರು ಹಾಕಿ Search ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಬೆಳೆಹಾನಿ ಪರಿಹಾರ ಜಮಾ ಮಾಹಿತಿ ಸಿಗಲಿದೆ.
FID based Belehani parihara-ನಿಮ್ಮ FID ನಂಬರ್ ಹಾಕಿ ನಿಮಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ
ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ
Mobile number based croploss compensation-ನಿಮ್ಮ ಮೊಬೈಲ್ ನಂಬರ್ ಹಾಕಿ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
Survey number based croploss compensation-ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Survey number/ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,ಸರ್ವೆ ನಂಬರ್,ಸರ್ ನಾಕ್,ಹಿಸ್ಸಾ ನಂಬರ್ select ಮಾಡಿ Get data/ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ.
ಇದನ್ನೂ ಓದಿ
Survey number based croploss compensation-ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-1269
ಸರ್ವೆ ನಂಬರ್ ವಾರು ಬೆಳೆಹಾನಿ ಪರಿಹಾರ ಜಮಾ ಮಾಡಲಾಗುತ್ತಿದೆ.
ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ
ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆದರವು (arecanut rate) ಭರ್ಜರಿ ಏರಿಕೆ ಕಂಡಿದೆ. 55 ಸಾವಿರ ಗಡಿಯತ್ತ ದರ ಏರಿಕೆಯಾಗುತ್ತಿದೆ. ಇಂದು (ಏ.4) ಗರಿಷ್ಠ ಬೆಲೆ 54,629 ರೂ.ಗೆ ಏರಿಕೆಯಾಗಿದೆ.
ಅಡಿಕೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ (Channagiri) ವಹಿವಾಟಿನಲ್ಲಿ ಏ.4ರಂದು ರಾಶಿ ಅಡಿಕೆ ಗರಿಷ್ಠ ಬೆಲೆ ಕ್ವಿಂಟಲ್ ಗೆ 54,629. ಇದ್ದು, ಕನಿಷ್ಠ ಬೆಲೆ 50,512 ರೂ., ಸರಾಸರಿ ಬೆಲೆ 53,130 ರೂ.ಇದೆ.
ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಅದರಲ್ಲೂ ಏಪ್ರಿಲ್ ತಿಂಗಳಲ್ಲಿ ಇನ್ನಷ್ಟು ಬಿಸಿಲು ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬಿಸಿಲಿನ ತಾಪಮಾನ ಹೆಚ್ಚಳದಿಂದ ಅಡಿಕೆಗೆ ಹಲವು ರೋಗಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಅಡಿಕೆ ತೋಟಗಳ ರಕ್ಷಣೆಗೆ ರೈತರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ.
ಜನವರಿ ಕೊನೆಯಲ್ಲಿ 52 ಸಾವಿರ ಒಳಗೆ ಇದ್ದ ದರ, ಫೆಬ್ರವರಿಯಲ್ಲಿ ಮತ್ತೆ 53 ಸಾವಿರ ಗಡಿ ದಾಟಿತ್ತು. ಮಾರ್ಚ್ ಮೊದಲ ವಾರದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ತಿಂಗಳ ಕೊನೆಯಲ್ಲಿ ಮತ್ತೆ 53 ಸಾವಿರ ಗಡಿ ದಾಟಿತ್ತು. ಇದೀಗ ಏಪ್ರಿಲ್ ನಲ್ಲಿ 55 ಸಾವಿರ ಗಡಿಯತ್ತ ಸಾಗುತ್ತಿದೆ. 2023 ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಕಳೆದ ವರ್ಷ (2024) ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿತ್ತು.
]]>
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಏಳು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಏಳು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಏಪ್ರಿಲ್ 6 ರಂದು ಕರಾವಳಿ ಕರ್ನಾಟಕದ ಕೆಲವೆಡೆ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಉತ್ತರ ಒಳ ಕರ್ನಾಟಕದಲ್ಲಿಯೂ ಮಳೆ,ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ 40-50 kmph ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ 40-50 ಕಿಮೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ
ದಕ್ಷಿಣ ಒಳ ಕರ್ನಾಟಕ ಭಾಗದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ 30-40 kmph ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ 30-40 ಕಿ.ಮೀ ಗಾಳಿಯೊಂದಿಗೆ ಲಘು ಮಳೆ ಮಳೆಯಾಗುವ ಸಾಧ್ಯತೆಯಿದೆ.
ಏಪ್ರಿಲ್ 7ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ 30-40 kmph ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳ ಕರ್ನಾಟಕ ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ (30-40 kmph) ಗಾಳಿಯೊಂದಿಗೆ ಲಘು ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ ಇದೆ
ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ ಧಾರವಾಡ, ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ ಇದೆ.
ದಕ್ಷಿಣ ಒಳ ಕರ್ನಾಟಕ:ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಲಘು ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ.
ಏಪ್ರಿಲ್ 9 ರಂದು ಕರಾವಳಿ ಕರ್ನಾಟಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಅಂದೇ ಉತ್ತರ ಒಳ ಕರ್ನಾಟಕ: ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಧಾರವಾಡ, ಕಲಬುರ್ಗಿ, ಬಾಗಲಕೋಟೆ, ಬೆಳಗಾವಿ, ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ. ದಕ್ಷಿ ಣ ಒಳ ಕರ್ನಾಟಕದಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ.
ಏಪ್ರಿಲ್10 ರಂದು ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕವಿಜಯಪುರ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 11ರಂದು ಕರಾವಳಿ ಕರ್ನಾಟಕ: ಕೆಲವೆಡೆ ಮಳೆಯಾಗುವ ಸಾಧ್ಯತೆ. ಉತ್ತರ ಒಳ ಕರ್ನಾಟಕ ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ. ದಕ್ಷಿಣ ಒಳ ಕರ್ನಾಟಕ: ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಎಲ್ಲಾ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಧಾರವಾಡ, ಬೆಳಗಾವಿ, ಹಾವೇರಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ.
ಉಳಿದ ಜಿಲ್ಲೆಗಳಲ್ಲಿ ಒಣಹವೆ ಸಾಧ್ಯತೆ.
]]>
ರಾಜ್ಯ ಸರ್ಕಾರ ವಸತಿ ರಹಿತರಿಗೆ ಗುಡ್ ನ್ಯೂಸ್ ನೀಡಿದ್ದು, ಈ ವರ್ಷ 2.30 ಲಕ್ಷ ಮನೆಗಳ ನಿರ್ಮಾಣ ಮಾಡುವುದಾಗಿ ಘೋಷಿಸಿದೆ.
ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 1.80 ಲಕ್ಷ ಮನೆಗಳು ಮಂಜೂರಾಗಿದ್ದು, ಮೊದಲ ಹಂತದಲ್ಲಿ 36,789, ಎರಡನೇ ಹಂತದಲ್ಲಿ 39,843 ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗಿದೆ.
ಉಳಿದ 1.30 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ 46 ಸಾವಿರ ಮನೆ ಸೇರಿ ಈ ವರ್ಷ 2.30 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವರಾದ ಜಮೀರ್ ಅಹಮದ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಯೋಜನೆಯ ಹೆಸರು- ಪ್ರಧಾನ ಮಂತ್ರಿ ಆವಾಸ್ ( ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ವಸತಿ ಕಲ್ಪಿಸುವ ಯೋಜನೆ)
ಸಹಾಯಧನದ ಮೊತ್ತ
ಎಸ್ ಸಿ ಎಸ್ ಟಿ
ಕೇಂದ್ರದ ಪಾಲು -72,000
ರಾಜ್ಯದ ಪಾಲು-78,000
ಒಟ್ಟು -1,50,000
ಸಾಮಾನ್ಯ ವರ್ಗದವರಿಗೆ
ಕೇಂದ್ರದ ಪಾಲು-72,000
ರಾಜ್ಯದ ಪಾಲು-48,000
ಒಟ್ಟು -1,20,000
ಫಲಾನುಭವಿಯ ಸ್ವಸಹಾಯವಂತಿಕೆ
ಎಲ್ಲಾ ವರ್ಗದ ಫಲಾನುಭವಿಗಳಿಗೆ ಕನಿಷ್ಠ ಒಂದು ಲಕ್ಷ
ಈ ಯೋಜನೆ ಅಡಿಯಲ್ಲಿ ಒದಗಿಸಲಾಗುವ ಆರ್ಥಿಕ ಸಹಾಯದ ಜೊತೆಗೆ ಫಲಾನುಭವಿಯು ಕನಿಷ್ಠ 30,000 ಗಳನ್ನು ಅಥವಾ ತನ್ನ ಸಾಮರ್ಥ್ಯ ಹಾಗೂ ವಸತಿಯ ಅವಶ್ಯಕತೆಗೆ ಅನುಸಾರವಾಗಿ ಸಾಧ್ಯವಾದಷ್ಟು ಸ್ವಂತ ಉಳಿತಾಯ ಹೂಡಿಕೆ ಮಾಡಿ ಹೆಚ್ಚಿನ ಹಾಗೂ ಉತ್ತಮ ಸೌಲಭ್ಯಗಳನ್ನು ಹೊಂದಬಹುದು
ಡಿ ಆರ್ ಐ ಯಡಿ ಸಾಲ ಮತ್ತು ಬಡ್ಡಿಯ ದರ
ಈ ಯೋಜನೆಯಡಿ ಸ್ಥಳೀಯ ಬ್ಯಾಂಕಿನಿಂದ 20000 ವರೆಗೆ ನಾಲ್ಕು ಪರ್ಸೆಂಟ್ ವಾರ್ಷಿಕ ಬಡ್ಡಿ ದರದಲ್ಲಿ ಸಾಲವನ್ನು ಆಯ್ಕೆಯಾದ ಫಲಾನುಭವಿಗಳು ಪಡೆದುಕೊಳ್ಳಲು ಅವಕಾಶವಿರುತ್ತದೆ
ಫಲಾನುಭವಿಯ ಆಯ್ಕೆ
ಕೇಂದ್ರ ಸರ್ಕಾರದಿಂದ ನೀಡಲಾದ ಫಲಾನುಭವಿಗಳ ಪಟ್ಟಿಯಿಂದ ನಿಯಮಾನುಸಾರ ಗ್ರಾಮ ಸಭೆಯಲ್ಲಿ ಆಯ್ಕೆ ಮಾಡಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಪಟ್ಟಿಗೆ ಅನುಮೋದನೆ ಪಡೆಯಲಾಗುವುದು. ನಂತರ ಸಂಬಂಧಪಟ್ಟ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಯ ಅನುಮೋದನೆಯೊಂದಿಗೆ ನಿಗಮದ ಅನುಮೋದನೆ ನೀಡಲಾಗುವುದು.
ಯೋಜನೆಯ ಅನುಷ್ಠಾನ
ಪ್ರತಿ ವರ್ಷ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಗುರಿಗನುಗುಣವಾಗಿ ಗುರಿ ನಿಗದಿಪಡಿಸಲಾಗುವುದು
ಮೀಸಲಾತಿ-SC ST ಶೇಕಡ 60%
ಅಲ್ಪಸಂಖ್ಯಾತ ಶೇಕಡ 15%
ಸಾಮಾನ್ಯ ಶೇಕಡಾ 25%
ಜಿಪಿಎಸ್ ತಂತ್ರಜ್ಞಾನ ಅಳವಡಿಕೆ
2011 12 ನೇ ಸಾಲಿನಿಂದ ಜಿಪಿಎಸ್ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತಿದೆ
ಅವ್ಯವಹಾರವನ್ನು ತಡೆಗಟ್ಟಲು ಹಾಗೂ ಸರ್ಕಾರದ ಹಣ ದುರುಪಯೋಗವಾಗದಂತೆ ನೋಡಿಕೊಂಡು ಫಲಾನುಭವಿಗಳಿಗೆ ವಸತಿ ಸೌಕರ್ಯವನ್ನು ಪಾರದರ್ಶಕತೆಯ ಮೂಲಕ ನೀಡಲು ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ಈ ತಂತ್ರಜ್ಞಾನದ ಉಪಯೋಗಗಳು ಇಂತಿವೆ
ಪ್ರತಿ ಮನೆಯ ಪ್ರಗತಿ ಹಂತದ ಛಾಯಾಚಿತ್ರವನ್ನು ಜಿಪಿಎಸ್ ಕ್ಯಾಮೆರಾ ಮೂಲಕ ಸೆರೆ ಹಿಡಿಯುವುದು
ಒಮ್ಮೆ ವಸತಿ ಸೌಕರ್ಯ ಪಡೆದ ಫಲಾನುಭವಿಗಳ ಪುನರಾವರ್ತನೆಗೆ ತಡೆ
ಛಾಯಾಚಿತ್ರದ ಆಧಾರದ ಮೇಲೆ ಅನುದಾನ ಬಿಡುಗಡೆ
ಮಾಹಿತಿಗಾಗಿ ಎಲ್ಲಾ ಮನೆಗಳ ಛಾಯಾಚಿತ್ರಗಳು ನಿಗಮದ ವೆಬ್ ಸೈಟ್ ನಲ್ಲಿ ಲಭ್ಯ
ಹಣದ ದುರ್ಬಳಕೆಗೆ ತಡೆ
ಅರ್ಹತೆ ಮತ್ತು ಷರತ್ತುಗಳು
ಸಂಬಂಧಪಟ್ಟ ಗ್ರಾಮ ಪಂಚಾಯತ್ ವಾಸಿ ಆಗಿರಬೇಕು
ಮನೆ ನಿವೇಶನ ಹಕ್ಕು ಪತ್ರವನ್ನು ಹೆಂಡತಿ ಹೆಸರಿನಲ್ಲಿ ವಿತರಿಸಬೇಕು
ಬೇರೆ ಯಾವುದೇ ಯೋಜನೆ ಅಥವಾ ಇಲಾಖೆಯಿಂದ ಈಗಾಗಲೇ ವಸತಿ ಸೌಲಭ್ಯ ಪಡೆದಿರಬಾರದು
ಮನೆಗಳ ವಿಸ್ತೀರ್ಣ ಮತ್ತು ವಿನ್ಯಾಸ : ಕನಿಷ್ಠ 25 ಚದರ ಮೀಟರ್ ನೆಲಗಟ್ಟು ವಿಸ್ತೀರ್ಣ ಇರುವಂತೆ ಮನೆ ನಿರ್ಮಿಸಬೇಕು. ಇದಕ್ಕಾಗಿ ಯಾವುದೇ ನಕ್ಷೆ ಅಥವಾ ವಿನ್ಯಾಸ ನಿಗದಿಪಡಿಸಿರುವುದಿಲ್ಲ. ಆದರೆ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಮಣ್ಣು ಹವಾ ಗುಣ ಪರಿಸ್ಥಿತಿ ಸ್ಥಳೀಯವಾಗಿ ಲಭ್ಯವಿರುವ ಸಾಮಗ್ರಿಗಳ ಬಳಕೆ ಇತ್ಯಾದಿ ಅಂಶಗಳನ್ನು ಪರಿಗಣಿಸಿ ಪ್ರದೇಶವಾರು ಮತ್ತು ಬದಲಿ ವಿನ್ಯಾಸಗಳನ್ನು ಅನುಸರಿಸಬಹುದು ಮನೆ ನಿರ್ಮಾಣದ ಪ್ರತಿ ಹಂತದಲ್ಲಿಯೂ ಫಲಾನುಭವಿ ಸಕ್ರಿಯವಾಗಿ ಪಾಲ್ಗೊಂಡು ಒಳ್ಳೆಯ ಗುಣಮಟ್ಟದ ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಹೊಂದಬಹುದು.
ಒಟ್ಟಾರೆ ಆಗಿದ್ದಾಗೆ ಸರ್ಕಾರವು ವಸತಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಧಿಸಬಹುದಾದ ನಿಯಮ ಮತ್ತು ಷರತ್ತುಗಳನ್ನು ತಪ್ಪದೇ ಪಾಲಿಸಬೇಕು
ಮನೆ ನಿರ್ಮಾಣ ಮಾಡುವ ಕ್ರಮ
ಸ್ವಂತ ಫಲಾನುಭವಿಗಳಿಂದ
ಫಲಾನುಭವಿಯೇ ಸ್ವಂತ ತನ್ನ ಮನೆಯನ್ನು ಸ್ಥಳಿಯವಾಗಿ ಅನುಮೋದಿತ ನಕ್ಷೆಗಳನ್ನು ಗುಣವಾಗಿ ಕಟ್ಟಿಕೊಳ್ಳಬಹುದು( ಇದಕ್ಕಾಗಿ ಕಾಮಗಾರಿ ಆದೇಶ ಹೊರಡಿಸಿ ನಿಗದಿತ ಕಂತುಗಳಲ್ಲಿ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆ ಮೂಲಕ ನೀಡಲಾಗುವುದು ನಿರ್ಮಾಣ ಸಂಸ್ಥೆ ಮೂಲಕ ಮನೆ ನಿರ್ಮಾಣಕ್ಕೆ ಅವಕಾಶ ಇರುವುದಿಲ್ಲ )
ಮನೆ ನಿರ್ಮಾಣ ಅವಧಿ
ಕನಿಷ್ಠ ನಾಲ್ಕು ತಿಂಗಳ ಒಳಗಾಗಿ ಮನೆಯನ್ನು ಪೂರ್ಣಗೊಳಿಸುವುದು
ಒದಗಿಸಬೇಕಾದ ದಾಖಲೆಗಳು
ಫಲಾನುಭವಿಯಿಂದ
ವಸತಿಗಾಗಿ ನಿಗದಿತ ಅರ್ಜಿ
ನಿವೇಶನ ಅಥವಾ ಮನೆಯನ್ನು ಸಾಲ ತೀರುವವರೆಗೂ ನಿಗಮದ ಪರವಾಗಿ ಅಡಮಾನ ಪತ್ರ ಬರೆದು ಕೊಡಬೇಕು
ಜಾತಿ ಪ್ರಮಾಣ ಪತ್ರ ಅಥವಾ ಆದಾಯ ಪ್ರಮಾಣ ಪತ್ರ
ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಥವಾ ಕಾರ್ಯನಿರ್ವಹಣಾಧಿಕಾರಿ ಅಥವಾ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಿಂದ
ಗ್ರಾಮ ಪಂಚಾಯಿತಿ ಅಥವಾ ಇಲಾಖೆ ಯೋಜನೆಯ ಅಡಿಯಲ್ಲಿ ನಿಯಮಗಳನ್ನು ಪಾಲಿಸಿರುವ ಬಗ್ಗೆ ಹಾಗೂ ದಾಖಲೆಗಳನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ಬಗ್ಗೆ ದೃಢೀಕರಣ ಪತ್ರ
ನಿಗದಿಪಡಿಸಿದ ನಮೂನೆಗಳಲ್ಲಿ ಪ್ರತಿ ತಿಂಗಳು ಅಥವಾ ವರ್ಷ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಗತಿ ವರದಿಗಳನ್ನು ತಪ್ಪದೆ ಸಲ್ಲಿಸಬೇಕು
ವಸತಿ ಯೋಜನೆಯ ಯಶಸ್ವಿ ಅನುಷ್ಠಾನದ ಬಗ್ಗೆ ಸಂಬಂಧಿಸಿದ ಇತರೆ ಮಾಹಿತಿ ಇತ್ಯಾದಿ
ಹೆಚ್ಚಿನ ವಿವರಗಳಿಗೆ ಈ ಕೆಳಕಂಡವರನ್ನು ಸಂಪರ್ಕಿಸಿ
ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ
ನಂಬರ್ 1 2 3 4
ಐ ಟಿ ಪಾರ್ಕ್ 1ನೇ ಮಾಡಿ ನಾಲ್ಕನೇ ಮುಖ್ಯ ರಸ್ತೆ ಕೈಗಾರಿಕಾ ಪ್ರದೇಶ ರಾಜಾಜಿನಗರ-580044
ದೂರವಾಣಿ-23118888
ಇ-ಮೇಲ್ -[email protected]
ವೆಬ್ ಸೈಟ್ - http://ashraya.kar.nic.in/
ನಿಮ್ಮ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಪಂಚಾಯತ್
ಆಯಾಯ ಸಂಬಂಧಿಸಿದ ಜಿಲ್ಲೆಗಳು
ಸಂಬಂಧಪಟ್ಟ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು
ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು
2024-25 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(Pradan mantri fasal bheema yojane) ಯೋಜನೆಯಡಿ ಒಟ್ಟು 21,786 ರೈತರಿಗೆ ರೂ. 30.05 ಕೋಟಿ ಬೆಳೆವಿಮೆ(Belevime) ಪರಿಹಾರ ಮಂಜೂರಾಗಿದ್ದು, ಹಂತ ಹಂತವಾಗಿ ರೈತರ ಖಾತೆಗೆ ಬೆಳೆವಿಮೆ ಪರಿಹಾರ ಜಮಾ ಆಗುವುದು ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು ತಿಳಿಸಿದ್ದಾರೆ.
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಬೆಳೆವಿಮೆ ಹಣ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಭೂ ದಾಖಲೆಗಳ ಕೊರತೆ, ಇಕೆವೈಸಿ ಸಮಸ್ಯೆ, ತೆರಿಗೆ ಪಾವತಿ ಸೇರಿದಂತೆ ವಿವಿಧ ಕಾರಣಗಳಿಂದ ರಾಜ್ಯದಲ್ಲಿ ಸುಮಾರು 10 ಲಕ್ಷಕ್ಕೂ ಅಧಿಕ ರೈತರು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಿಂದ ವಂಚಿತರಾಗಿದ್ದರೆ!
ರಾಜ್ಯದಲ್ಲಿ ಗರಿಷ್ಠ ಮಟ್ಟದ ರೈತರು ಅಂದರೆ 54 ಲಕ್ಷಕ್ಕೂ ಅಧಿಕ ರೈತರು ನೋಂದಣಿ ಮಾಡಿ ಯೋಜನೆಯ ಲಾಭ ಪಡೆಯುತ್ತಿದ್ದರು. ಈ ಪೈಕಿ 44.20 ಲಕ್ಷ ರೈತರಿಗೆ ಮಾತ್ರ ಯೋಜನೆಯ ಲಾಭ ಸಿಗುವಂತಾಗಿದೆ.
ಪ್ರತಿ ಕಂತಿನ ಸಂದರ್ಭದಲ್ಲಿ ರೈತರ ಸಂಖ್ಯೆ ಏರುಪೇರಾಗುತ್ತದೆ. ಏಕೆಂದರೆ, ರೈತರ ನೋಂದಣಿ ಕಾರ್ಯ ನಿರಂತರ ಪ್ರಕ್ರಿಯೆಯಾಗಿದ್ದು, ಅರ್ಹರನ್ನು ಸೇರಿಸುವುದು ಹಾಗೂ ಅನರ್ಹರನ್ನು ತೆಗೆಯುವ ಪ್ರಕ್ರಿಯೆ ನಡೆಯುತ್ತದೆ. ಇದನ್ನು ಗ್ರಾಮ ನೋಡಲ್ ಅಧಿಕಾರಿಗಳು ಪರಿಶೀಲಿಸುತ್ತಾರೆ.
2019ರ ನಂತರ ಖಾತೆ ಮಾಡಿಸಿಕೊಂಡ ಲಕ್ಷಾಂತರ ಮಂದಿಗೆ ಈ ಯೋಜನೆಯ ಲಾಭವೇ ಸಿಗುತ್ತಿಲ್ಲ. ಇದಕ್ಕೂ ಮೊದಲು ಯಾವ ರೈತರು ತಮ್ಮ ಹೆಸರಿನಲ್ಲಿ ಖಾತೆ ಹೊಂದಿರುತ್ತಾರೋ ಅಂಥವರು ರೈತ ಸಂಪರ್ಕ ಕೇಂದ್ರಗಳಲ್ಲಿಆಧಾರ್ ಮತ್ತು ಪಹಣಿಯೊಂದಿಗೆ ಫ್ರೂಟ್ಸ್ ಐಡಿ ತಂತ್ರಾಂಶದಲ್ಲಿ ಹೆಸರು ನೋಂದಣಿ ಮಾಡಿಸಿಕೊಂಡು ಇಕೆವೈಸಿಯೊಂದಿಗೆ ಕಿಸಾನ್ ಸಮ್ಮಾನ್ ಯೋಜನೆಯ ಲಾಭ ಪಡೆಯಬಹುದಿತ್ತು. ಒಂದು ವೇಳೆ ಯೋಜನೆಯ ಲಾಭ ಪಡೆಯುತ್ತಿದ್ದ ಜಮೀನಿನ ಮಾಲೀಕರು ನಿಧನ ಹೊಂದಿದರೆ, ಇತರೆ ವಾರಸುದಾರರು ಪೌತಿ ಖಾತೆ ಮಾಡಿಸಿದರೆ ಆಗ ಈ ಯೋಜನೆಗೆ ಅರ್ಹರಾಗುತ್ತಿದ್ದರು. ಆದರೆ, ಕೇಂದ್ರ ಸರಕಾರದ ಮಾರ್ಗಸೂಚಿಯಂತೆ 2019ರ ನಂತರ ಜಮೀನು ಖರೀದಿಸಿದವರು ಇದರ ವ್ಯಾಪ್ತಿಗೆ ಬರುವುದಿಲ್ಲಎಂದು ಕೃಷಿ ಇಲಾಖೆ ಹೇಳುತ್ತಿದೆ.
ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ನೋಂದಣಿಯು ನಿರಂತರ ಪ್ರಕ್ರಿಯೆ. ಅನರ್ಹರನ್ನು ತೆಗೆಯುವ, ಅರ್ಹರನ್ನು ಸೇರ್ಪಡೆ ಮಾಡುವ
ಕೆಲಸ ಸದಾ ಪ್ರಗತಿಯಲ್ಲಿರುತ್ತದೆ. ಒಂದು ವೇಳೆ ತಾಂತ್ರಿಕ ದೋಷ, ಇ-ಕೆವೈಸಿ ಸಮಸ್ಯೆಯಿಂದ ಯಾವುದೇ ರೈತರ ಹೆಸರು ಯೋಜನೆಯ ಪಟ್ಟಿಯಿಂದ ಕೈಬಿಟ್ಟಿದ್ದರೆ, ಮರುಪರಿಶೀಲನೆಗೆ ಅವಕಾಶವಿದೆ. ಅರ್ಹರಿಗೆ ಬಾಕಿ ಸೇರಿಸಿ ಹಣವನ್ನು ನೀಡಲಾಗುವುದು. ಹೀಗಾಗಿ, ಅರ್ಹರಿಗೆ ವಂಚನೆಯಾಗುವುದಿಲ್ಲ ಎಂದು ಕೃಷಿ ಇಲಾಖೆ ನಿರ್ದೇಶಕ ಜಿ.ಟಿ. ಪುತ್ರ ತಿಳಿಸಿದ್ದಾರೆ.
ಭೂಮಿ ಹೊಂದಿರುವ ಸಂಘ ಅಥವಾ ಸಂಸ್ಥೆಗಳು, ಮಾಜಿ ಮತ್ತು ಹಾಲಿ ಸಾಂವಿಧಾನಿಕ ಹುದ್ದೆಗಳಲ್ಲಿ ಕುಟುಂಬ ಸದಸ್ಯರು, 10 ಸಾವಿರ ಅಥವಾ ಅದಕ್ಕಿಂತ ಹೆಚ್ಚಿನ ಪಿಂಚಣಿ ಪಡೆಯುವ ನಿವೃತ್ತರು(ಗ್ರೂಪ್ ಡಿ ಹೊರತುಪಡಿಸಿ), ಕಳೆದ ಸಾಲಿನಲ್ಲಿ ಆದಾಯ ತೆರಿಗೆ ಪಾವತಿಸಿದವರು, ವೈದ್ಯರು, ಎಂಜಿನಿಯರ್ಗಳು, ವಕೀಲರು, ಲೆಕ್ಕ ಪರಿಶೋಧಕರು, ವಾಸ್ತುಶಿಲ್ಪದಂತಹ ವೃತ್ತಿಪರರು ಯೋಜನೆಗೆ ಅನರ್ಹರು.
2023ರ ಅಕ್ಟೋಬರ್ 25ರ ಹೊಸ ಮಾರ್ಗಸೂಚಿ ಅನ್ವಯ ಕನಿಷ್ಠ ಮೂರು ವರ್ಷ ಆದಾಯ ತೆರಿಗೆ ಪಾವತಿಸಿದ್ದರೆ ಯೋಜನೆಗೆ ಅನರ್ಹರಾಗಿರುತ್ತಾರೆ.
ರಾಜ್ಯದ 44.20 ಲಕ್ಷಕ್ಕೂ ಅಧಿಕ ರೈತ ಫಲಾನುಭವಿಗಳಿಗೆ ಕೇಂದ್ರ ಸರಕಾರದಿಂದ ಒಟ್ಟಾರೆ 884.01 ಕೋಟಿ ರೂ.ಗಳನ್ನು ಪ್ರಧಾನ ಮಂತ್ರಿಯವರು ರೈತರ ಆಧಾರ್ ಜೋಡಿತ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ.
ಸಾಗುವಳಿ ಭೂಮಿ ಹೊಂದಿರುವ ಎಲ್ಲಾಅರ್ಹ ರೈತ ಕುಟುಂಬಗಳಿಗೆ ಕೃಷಿ ಚಟುವಟಿಕೆಯಲ್ಲಿ ಉತ್ತಮ ಪರಿಕರಗಳನ್ನು ಬಳಸಿ ಬೆಳೆಗಳ ಆರೋಗ್ಯ ನಿರ್ವಹಣೆ ಹಾಗೂ ಹೆಚ್ಚಿನ ಇಳುವರಿ ಪಡೆದು ನಿರೀಕ್ಷಿತ ಆದಾಯಗೊಳಿಸಲು ನೆರವಾಗಲು ವಾರ್ಷಿಕ 6 ಸಾವಿರ ರೂ.ಗಳ ಆರ್ಥಿಕ ನೆರವು ನೀಡಲಾಗುತ್ತಿದೆ. 2 ಸಾವಿರ ರೂ.ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ಅನುದಾನ ನೀಡಲಾಗುತ್ತದೆ.
Pmkisan instalment ineligible list-ಪಿಎಂ ಕಿಸಾನ್ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
Kisan samman-ತುಂಡು ಕೃಷಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರಿಗೂ ಪಿಎಂ ಕಿಸಾನ್ ಹಣ-ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್,ಹಾಗಾದರೆ ಅರ್ಹತೆಯ ಮಾನದಂಡಗಳೇನು? - https://krushirushi.in/Kisan-samman-1959
]]>
ವಕ್ಫ್ (ತಿದ್ದುಪಡಿ) ಮಸೂದೆ 2024, 1995 ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮಸೂದೆಯಾಗಿದೆ. ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆಯನ್ನ ಇಂದು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ವಕ್ಫ್ ಆಸ್ತಿಗಳ ನಿರ್ವಹಣೆ, ಪಾರದರ್ಶಕತೆ ಮತ್ತು ದುರುಪಯೋಗ ತಡೆಗಟ್ಟುವಿಕೆಗಾಗಿ ನಿಯಮಗಳನ್ನು ಬಿಗಿಗೊಳಿಸುವುದು ಇದರ ಉದ್ದೇಶವಾಗಿದೆ. ಇದು ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರು ಮತ್ತು ಮಹಿಳಾ ಸದಸ್ಯರನ್ನು ಸೇರಿಸುವುದು, ಕಲೆಕ್ಟರ್ಗೆ ಆಸ್ತಿಯನ್ನು ಸಮೀಕ್ಷೆ ಮಾಡುವ ಹಕ್ಕನ್ನು ನೀಡುವುದು ಮತ್ತು ವಕ್ಫ್ ನ್ಯಾಯಮಂಡಳಿಯ ನಿರ್ಧಾರಗಳನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುವ ನಿಬಂಧನೆಯನ್ನು ಒಳಗೊಂಡಿದೆ.
Waqf property-ನಿಮ್ಮ ಹೊಲ ಮನೆ ಪಹಣೆಯಲ್ಲಿ ವಕ್ಫ್ ಬೊರ್ಡ್ ಹೆಸರಿದೆಯೆ ಹೀಗೆ ಚೆಕ್ ಮಾಡಿಕೊಳ್ಳಿ
ನಿಮಗೆ ಗೊತ್ತಿಲ್ಲದೇ ಹಾಗೆ ನಿಮ್ಮ ಪಹಣಿಯಲ್ಲಿ(RTC) ಅವರ ಹೆಸರು ಹಾಕಿದ್ದಾರೆ ಎಂಬುದನ್ನು ರೈತರು ಒಮ್ಮೆ ಪರಿಶೀಲಿಸಿ. ಈ ಕೆಲಸವನ್ನು ಪ್ರತಿಯೊಂದು ರೈತರು ಆದಷ್ಟು ಬೇಗ ಮಾಡಬೇಕು. ಈ ಮಾಹಿತಿ ನಿಮ್ಮ ಕಾನೂನು ಹೋರಾಟಕ್ಕೆ ನಿರ್ಣಾಯಕ ಹಾಗೂ ಸಾಕ್ಷ್ಯ ಸಂಗ್ರಹಿಸಲು ಅಗತ್ಯವಾದ ಪ್ರಕ್ರಿಯೆ ಆಗಿರುತ್ತದೆ. ಆದ್ದರಿಂದ ಇಂದೇ ನಿಮ್ಮ ಪಹಣಿಯ(Uthara) ಕಾಪಿ ಪಡೆದು ಪರಿಶೀಲನೆ ಮಾಡಿ, ಒಂದು ವೇಳೆ ಯಾರಾದರು ಎಂದು ನಮೂದಿಸಲಾಗಿದ್ದಲ್ಲಿ ಕೂಡಲೇ ಜಮೀನಿನ ದಾಖಲೆ(Land records) ಹಾಗೂ ಪಹಣಿಯೊಂದಿಗೆ ತಹಶಿಲ್ದಾರ್ ಅಥವಾ ಜಿಲ್ಲಾದಿಕಾರಿಗಳಿಗೆ ದೂರು ಸಲ್ಲಿಸಿ
ನಿಮ್ಮ ಪಹಣೆಯಲ್ಲಿ(pahani) ಯಾರ ಹೆಸರಿದೆ ಎಂದು ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಲಿಂಕ್ ಮೋಲೆ ಕ್ಲಿಕ್ ಮಾಡಿ
https://landrecords.karnataka.gov.in/Service2/
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಪಹಣೆಯಲ್ಲಿ ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಈಗಾಗಲೇ ಘಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣ ಕೂಡ ಬಿಡುಗಡೆಯಾಗಿದ್ದು, ಶೀಘ್ರವೇ ಜಮೆಯಾಗಲಿದೆ.” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಕೇಂದ್ರ ಸರ್ಕಾರದ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 2024-25 ನೇ ಸಾಲಿನಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಕೇಂದ್ರ ಸರ್ಕಾರದಿಂದ 2 ನೇ ಕಂತಿನ ಅನುದಾನ ರೂ. 366.00 ಕೋಟಿಗಳನ್ನು ಮೇಲೆ ಓದಲಾದ (7) ರ ಪತ್ರದಲ್ಲಿ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುತ್ತದೆ. ಮೇಲೆ ಓದಲಾದ (8) ರ ಹಿಂಬರಹದಲ್ಲಿ ಆರ್ಥಿಕ ಇಲಾಖೆಯು 2 ನೇ ಕಂತಿನ ರಾಜ್ಯದ ಪಾಲು ರೂ. 122.00 ಕೋಟಿಗಳನ್ನು ಬಿಡುಗಡೆ ಮಾಡಿರುತ್ತದೆ.
ವಿವತ್ತು ನಿರ್ವಹಣೆಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರದ ಗ್ರಹ ಮಂತ್ರಾಲಯವು ಹೊರಡಿಸಿರುವ ಮಾರ್ಗಸೂಚಿಗಳನ್ವಯ ವಿಪತ್ತು ನಿರ್ವಹಣೆಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಿರ್ದೇಶಕರು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ರವರಿಗೆ ಹಾಗೂ ನೈಸರ್ಗಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ತಕ್ಷಣ ನಿಭಾಯಿಸಲು ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡುವುದು ಅವಶ್ಯಕವಾಗಿರುತ್ತದೆ.
ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಏಪ್ರಿಲ್ ತಿಂಗಳ ಮೊದಲ ವಾರ ರಾಜ್ಯದಲ್ಲಿ ಭರ್ಜರಿ ಮಳೆ ಮುನ್ಸೂಚನೆ ಸಿಕ್ಕಿದೆ. ಭಾರೀ ಮಳೆಯ ಹಿನ್ನೆಲೆ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೂಡಾ ಘೋಷಿಸಲಾಗಿದೆ.
ಏಪ್ರಿಲ್ 4 ಶುಕ್ರವಾರ , 5 ಶನಿವಾರ ಹಾಗೂ 6 ಭಾನುವಾರದಂದು ಭಾರಿ ಮಳೆ ಹಿನ್ನೆಲೆ ಈ ಪ್ರಮುಖ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ವಿಜ್ಞಾನಿ ಸಿಎಸ್ ಪಾಟೀಲ್ ಹೇಳಿದ್ದಾರೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ,
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗದಲ್ಲಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ,ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ ಹಗುರ ಮಳೆ ಆರಂಭವಾಗಿ, ಬುಧವಾರದಿಂದ ರಾಜ್ಯದಾದ್ಯಂತ ಮಳೆ ವ್ಯಾಪಿಸಲಿದೆ. ಏ.3, 4, ಹಾಗೂ 5 ರಂದು ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಲ್ಲಿ ಏ.2 ರಿಂದ ಏ.4 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರಾದ ಸಿಎಸ್ ಪಾಟೀಲ್ ಹೇಳಿದ್ದಾರೆ.
ಕರ್ನಾಟಕದ 7 ದಿನಗಳ ಹವಾಮಾನ ಮುನ್ಸೂಚನೆ
ದಿನಾಂಕ 01-04-2025: ದಿನ 1 (ಏಪ್ರಿಲ್ 1, 2025): ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಹಗುರ ಮಳೆ ಆಗಲಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ.
ದಿನ 2 (ಏಪ್ರಿಲ್ 2, 2025): ರಾಜ್ಯದಲ್ಲಿ 50-60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಕಲಬುರ್ಗಿ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಆಗಲಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವೆಡೆ ಮತ್ತು ಬಳ್ಳಾರಿ, ವಿಜಯಪುರ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಿನ 3 (ಏಪ್ರಿಲ್ 3, 2025): ವಾಯುಭಾರ ಕುಸಿತದ ಪ್ರಭಾವದಿಂದ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ 50-60 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಮಳೆ ಸಾಧ್ಯತೆ ಇದೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-60 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ ಗಂಟೆಗೆ 40-60 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಿನ 4-5 (ಏಪ್ರಿಲ್ 4 ಹಾಗೂ 5 ರಂದು 2025): ಗಾಳಿ ಸಂಗಮ ಮತ್ತು ವಾಯುಭಾರ ಕುಸಿತದ ಪ್ರಭಾವದಿಂದ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಮತ್ತು ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಗಂಟೆಗೆ 40-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ದಿನ 6 (ಏಪ್ರಿಲ್ 6, 2025): ಗಾಳಿಯ ಸಂಗಮ ಮತ್ತು ವಾಯುಭಾರ ಕುಸಿತದ ಪ್ರಭಾವದಿಂದ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಹಲವು ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ದಿನ 7 (ಏಪ್ರಿಲ್ 7, 2025): ಕರಾವಳಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮತ್ತು ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
]]>
ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವನ್ನು ಖಜಾನೆಗೆ ಕಳುಹಿಸಿದ್ದು, ಯುಗಾದಿ ಮತ್ತು ರಾಮ್ಹಾನ್ ಹಬ್ಬದ ಸಂದರ್ಭದಲ್ಲಿ ಖುಷಿಯ ವಿಚಾರ. ಫೆಬ್ರವರಿ ತಿಂಗಳ ಹಣವನೂ ಶೀಘ್ರವೇ ನೀಡುತ್ತೇವೆ" ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ರವಿವಾರ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಇನ್ನೆರಡು ದಿನಗಳಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ ಎಂದು ಹೇಳಿದರು.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
https://everydaytrends.in/kmf-to-procure-maize-at-2400-per-quintal/
ರಾಜ್ಯದ ರೈತರಿಗೆ ಕೆಎಂಎಫ್ ನಿಂದ ಗುಡ್ ನ್ಯೂಸ್: ಕ್ವಿಂಟಾಲ್ ಗೆ 2400 ರೂ. ದರದಲ್ಲಿ ಮೆಕ್ಕೆಜೋಳ ಖರೀದಿ
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/PariharaPayment/
ನಂತರ "ಆಧಾರ್ ಸಂಖ್ಯೆ/Aadhar number" ಮೇಲೆ ಕ್ಲಿಕ್ ಮಾಡಿ
ನಂತರ calamity type "Flood" ಎಂದು ಋುತು "2024-25" ಎಂದು select ಮಾಡಿ
ನಂತರ ನಿಮ್ಮ ಆಧಾರ್ ನಂಬರ್/Aadhar number ಹಾಕಿ,captch code ಹಾಕಿ,ವಿವರಗಳನ್ನು ಪಡೆಯಲು/Fetch details ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪರಿಹಾರ ಹಣ ಜಮಾ ಸ್ಟೇಟಸ್ ತಿಳಿಯಲಿದೆ
ಏಪ್ರಿಲ್ 4ರವರೆಗೆ ಯೆಲ್ಲೋ ಅಲರ್ಟ್
ಕರ್ನಾಟಕದ ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಏಪ್ರಿಲ್ 4ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಏ.1ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿಯ ವೇಗದೊಂದಿಗೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗಂಟೆಗೆ 50-60 ಕಿಮೀ ವೇಗದ ಗಾಳಿಯೊಂದಿಗೆ ಆಲಿಕಲ್ಲು ಮತ್ತು ಬಿರುಗಾಳಿ ಸಹಿತ ಹಗುರ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏ. 2ರಂದು ಕರಾವಳಿಯ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆಲಿಕಲ್ಲು ಮಳೆ ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 40-50 ಕಿಲೋಮೀಟರ್ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಂಭವಿಸಬಹುದು. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾವೇರಿ, ಬೀದರ್, ಕಲ್ಬುರ್ಗಿ, ಯಾದಗಿರಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಅಲಿಕಲ್ಲು ಮತ್ತು ಗಂಟೆಗೆ 50-60 ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ಹಗುರ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಇದೆ.
ಏ. 3ರಂದು ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಚಿತ್ರದುರ್ಗ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವೆಡೆ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಅಲಿಕಲ್ಲು ಮಳೆ ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 40-50 ಕಿಲೋಮೀಟರ್ ಸಂಭವಿಸಬಹುದು.
]]>
ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ ಹತ್ತು ದಿನಗಳ ಕಾಲ ಕುರಿ ಸಾಕಾಣಿಕೆ ತರಬೇತಿಯನ್ನು ದಿನಾಂಕ 2/4/2025 ರಿಂದ 11/4/2025 ವರೆಗೆ ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ಕಲಿಸುವ ವಿಷಯಗಳು
1)ಕುರಿ ತಳಿಗಳು
2)ಕುರಿಗೆ ಬರುವಂತಹ ವಿವಿಧ ರೋಗಗಳು
3)ಕುರಿಗಳನ್ನು ಕೊಬ್ಬಿಸುವ ವಿಧಾನ
4)ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಹಿತಿ
5)ವಿವಿಧ ಔಷಧ ಉಪಚಾರಗಳು
6)ಕುರಿ ಶಡ್ ನಿರ್ಮಾಣ
7)ಲೋನ್ ಗಳ ಮಾಹಿತಿ
8)ಸಬ್ಸಿಡಿಗಳ ಮಾಹಿತಿ
9) ಪ್ರಾಜೆಕ್ಟ್ ರಿಪೋರ್ಟ್ ಮಾಹಿತಿ
10) ಮನೆಮದ್ದುಗಳ ಮಾಹಿತಿ
ಇನ್ನು ಇತರೆ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು
ಆಸಕ್ತರು ಕೂಡಲೇ ಕೆಳಗಡೆ ನಮೂದಿಸಿದ ಮೊಬೈಲ್ ನಂಬರ್ ಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಿ
8660219375
.
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಇರುವ ಲೀಡ್ ಬ್ಯಾಂಕ್ ತರಬೇತಿ ಕೇಂದ್ರಗಳಲ್ಲಿ ತರಭೇತಿ ಆಯೋಜಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಲೀಡ್ ಬ್ಯಾಂಕ್ ಸಂಪರ್ಕಿಸಿ
]]>ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(Pradan mantri kisan samman nidhi yojane)ಹಣ ಪಡೆಯಲು ನಕಲಿ ಖಾತೆಗಳನ್ನು ರಚಿಸಿರುವ ಬೃಹತ್ ಹಗರಣ ರಾಜಸ್ತಾನದಲ್ಲಿ ಬೆಳಕಿಗೆ ಬಂದಿದೆ.
ರಾಜಸ್ಥಾನದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ದೊಡ್ಡ ಹಗರಣ ಬೆಳಕಿಗೆ ಬಂದಿದ್ದು, ಯೋಜನೆಯ ಹಣ ಪಡೆಯಲು ಮುಸ್ಲಿಮರ ಹೆಸರಿನಲ್ಲಿ 29,000 ನಕಲಿ ಖಾತೆಗಳನ್ನು ತೆರೆದಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.
29 ಸಾವಿರ ನಕಲಿ ಖಾತೆಗಳಿಗೆ 7 ಕೋಟಿ ವರ್ಗಾವಣೆ
ವಂಚಕರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅಕ್ರಮವಾಗಿ ಹಣ ಪಡೆಯಲು ಸುಮಾರು 29 ಸಾವಿರ ನಕಲಿ ಬ್ಯಾಂಕ್ ಖಾತೆಗಳನ್ನು ರಚಿಸಿದ್ದಾರೆ. ಈ ಖಾತೆಗಳಿಗೆ ಸುಮಾರು 7 ಕೋಟಿ ರೂ ಹಣ ವರ್ಗಾವಣೆಯಾಗಿದೆ ಎಂದು ಹೇಳಲಾಗಿದೆ. ಅಚ್ಚರಿ ಎಂದರೆ ಈ 29 ಸಾವಿರ ಖಾತೆಗಳು ರಾಜಸ್ತಾನದ ಒಂದೇ ಜಿಲ್ಲೆಯಲ್ಲಿ ರಚಿಸಲಾಗಿದೆ.
ಇನ್ನು ಕರ್ನಾಟಕದಲ್ಲಿ ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯ (ಪಿಎಂ-ಕಿಸಾನ್) ಫಲಾನುಭವಿಗಳ ಸಂಖ್ಯೆ(pmkisan ineligible list) ಐದು ಲಕ್ಷದಿಂದ ಆರು ಲಕ್ಷದಷ್ಟು ಕುಸಿತವಾಗಿದೆ.
ಲೋಕಸಭೆಯಲ್ಲಿ ಮೈಸೂರು ಸಂಸದ ಯದುವೀರ್ ಒಡೆಯರ್ ಮಂಗಳವಾರ ಕೇಳಿದ ಪ್ರಶ್ನೆಗೆ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್ ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ.
13ನೇ ಕಂತಿನವರೆಗೆ (2023ರ ಮಾರ್ಚ್) ರಾಜ್ಯದ ಫಲಾನುಭವಿಗಳ ಸಂಖ್ಯೆ 49 ಲಕ್ಷದಷ್ಟು ಇತ್ತು. 14ನೇ ಕಂತಿನಲ್ಲೂ ಫಲಾನುಭವಿಗಳ ಸಂಖ್ಯೆ 49.34 ಲಕ್ಷ ಆಗಿತ್ತು. 15ನೇ ಕಂತಿನಲ್ಲಿ ಈ ಸಂಖ್ಯೆ 43.78 ಲಕ್ಷಕ್ಕೆ ಕುಸಿಯಿತು. ಆ ಬಳಿಕ ಸಂಖ್ಯೆಯಲ್ಲಿ ಗಣನೀಯ ಏರಿಕೆ ಆಗಿಲ್ಲ.
ಪಿಎಂ- ಕಿಸಾನ್ ಯೋಜನೆಯಡಿ ಕೃಷಿಕರಿಗೆ ವಾರ್ಷಿಕ ₹6 ಸಾವಿರ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಈ ಮೊತ್ತವನ್ನು ₹8 ಸಾವಿರ ಅಥವಾ ₹12 ಸಾವಿರಕ್ಕೆ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
Pmkisan instalment ineligible list-ಪಿಎಂ ಕಿಸಾನ್ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
Kisan samman-ತುಂಡು ಕೃಷಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರಿಗೂ ಪಿಎಂ ಕಿಸಾನ್ ಹಣ-ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್,ಹಾಗಾದರೆ ಅರ್ಹತೆಯ ಮಾನದಂಡಗಳೇನು? - https://krushirushi.in/Kisan-samman-1959
]]>
ಯುಗಾದಿ, ರಂಜಾನ್ ಹಬ್ಬಕ್ಕೆ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ನೀಡುವ 2,000 ರೂ.
ಸಹಾಧನದ ಒಂದು ಕಂತಿನ ಹಣ ಬಿಡುಗಡೆ ಮಾಡಲಾಗುವುದು, ಈಗಾಗಲೇ ಹಣ ಬಿಡುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಯುಗಾದಿ, ರಂಜಾನ್ ಹಬ್ಬಕ್ಕೆ ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ಬದ್ಧತೆಗೆ ಹೆಸರಾಗಿರುವ ಪಕ್ಷ. ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತಿ ದೊಡ್ಡ ಯೋಜನೆಯಾಗಿದೆ. 1.22 ಕೋಟಿ ಫಲಾನುಭಗಳಿಗೆ ಇದುವರೆಗೂ 34 ಸಾವಿರ ಕೋಟಿ ರೂಪಾಯಿ ಹಣವನ್ನು ಹಾಕಲಾಗಿದೆ. ಈ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ನನಗೆ ಹೆಮ್ಮೆಯಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ password create ಮಾಡಿ
Mobile number,Create ಮಾಡಿದ password ಹಾಗೂ captcha code ಹಾಕಿ ಲಾಗಿನ್ ಮಾಡಿ
ನಂತರ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, Search ಮೇಲೆ ಕ್ಲಿಕ್ ಮಾಡಿ
ನಂತರ NPCI check ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ NPCI active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆಹಾನಿ,ಬೆಳೆವಿಮೆ,ಪಿಎಂ ಕಿಸಾನ್ ಹಣ.
NPCI inactive ಎಂದು ಇದ್ದರೆ ನಿಮ್ಮ ಖಾತೆ ಇರುವ ಬ್ಯಾಂಕ್ ಗೆ ಹೋಗಿ ಕೂಡಲೇ NPCI Mapping ಮಾಡಿಸಿ
]]>ಸಾಲಮನ್ನಾ ತಂತ್ರಾಂಶದಲ್ಲಿ ಅರ್ಹತೆ ಹೊಂದಿ 2020-21 ನೇ ಸಾಲಿನಲ್ಲಿ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯು ಹಸಿರು ಪಟ್ಟಿ ನೀಡಿದ 31 ಸಾವಿರ ರೈತರಿಗೆ 167.51 ಕೋಟಿ ರೂ.ಗಳ ಅನುದಾನ ಬಿಡುಗಡೆ ಭೂದಾಖಲೆಗಳ ಇಲಾಖೆಯಿಂದ ಹಸಿರು ಪಟ್ಟಿ ನೀಡಲಾಯಿತು.
ಸರ್ಕಾರ 17.06 ಲಕ್ಷ ರೈತರಿಗೆ 7,987.47 ಕೋಟಿ ರೂ.ಗಳನ್ನು ಉಳಿತಾಯ ಖಾತೆಗೆ ಬಿಡುಗಡೆ ಮಾಡಿ ಸಾಲಮನ್ನಾ ಸೌಲಭ್ಯವನ್ನು ದೊರಕಿಸಿದೆ ಎಂದು ವಿವರಿಸಿದ್ದಾರೆ. ಸಾಲಮನ್ನಾ ತಂತ್ರಾಂಶದಲ್ಲಿ ಅರ್ಹತೆ ಹೊಂದಿ 2020-21 ನೇ ಸಾಲಿನಲ್ಲಿ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯು ಹಸಿರು ಪಟ್ಟಿ ನೀಡಿದ 31 ಸಾವಿರ ರೈತರಿಗೆ 167.51 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಅಲ್ಲಿ ಅಂಗೀಕಾರಗೊಂಡ ಬಳಿಕ ಸಾಲಮನ್ನಾದ ಅನುದಾನವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
ಕೆಲವು ಡಿಸಿಸಿ ಬ್ಯಾಂಕ್ಗಳ ವ್ಯಾಪ್ತಿಯಲ್ಲಿ ಬರುವ ಸಹಕಾರ ಸಂಘಗಗಳಲ್ಲಿ ಸಾಲಮನ್ನಾ ಆಗಿರುವ ರೈತರಿಗೆ ಪುನಃ ಸಾಲ ನೀಡದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ.
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list
ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.
ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.
ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ
ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ/farmer" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು/Submit" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
]]>
ರಾಜ್ಯ ಸರ್ಕಾರ ಒಟ್ಟು 34.50 ಲಕ್ಷ ರೈತರಿಗೆ ಬೆಳೆ ನಷ್ಟ ಪರಿಹಾರ ಕೊಟ್ಟಂತಾಗಲಿದೆ. ಆದರೆ ಶೇ.60 ರಿಂದ 70 ರೈತರು ಬಿಟ್ಟು ಹೋಗಿದ್ದಾರೆ. ಪರಿಹಾರ ಪಡೆದವರಿಗಿಂತ ವಂಚಿತರೇ ಹೆಚ್ಚು ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಸ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಪ್ರತಿ ಹೆಕ್ಟೇರ್ ಖುಷ್ಕಿ ಬೆಳೆಗೆ 8,300 ರೂ., ನೀರಾವರಿ- 17,000 ತೋಟಗಾರಿಕೆ ಬೆಳೆಗೆ 22,500 ರೂ. ನಿಗದಿಪಡಿಸಿ, ಗರಿಷ್ಠ ಎರಡು ಹೆಕ್ಟೇರ್ಗೆ ನೀಡಿದ್ದು, ರೈತರು ಹೂಡಿದ ಬಂಡವಾಳಕ್ಕೆ ಹೋಲಿಸಿದರೆ ಭಿಕ್ಷೆ ಹಾಕಿದಂತಿದೆ. ಕೇಂದ್ರದ ಜತೆಗೆ ರಾಜ್ಯ ಸರ್ಕಾರವೂ ತನ್ನ ಪಾಲಿನ ಮೊತ್ತ ಸೇರಿಸಿದ್ದರೆ ಒಂದಿಷ್ಟು ಪ್ರಯೋಜನವಾಗುತ್ತಿತ್ತು. ಕಿಸಾನ್ ಸಮ್ಮಾನ್ ನಿಧಿಯಡಿ 4000 ರೂ. ಕೊಡುವುದನ್ನು ಮುಂದುವರಿಸಿದ್ದರೆ ಕಷ್ಟ ಕಾಲದಲ್ಲಿ ಆಸರೆಯಾಗುತ್ತಿತ್ತು ಎನ್ನುವುದು ರೈತರ ವೇದನೆಯಾಗಿದೆ.
ತಿರಸ್ಕೃತ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment failed cases select ಮಾಡಿ Get reports ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಈ ಕೆಳಗಿನಂತೆ ಪರಿಹಾರ ವಿಫಲ ಪ್ರಕರಣಗಳ ಪಟ್ಟಿ ದೊರೆಯಲಿದೆ
ಅದೇ ರೀತಿ payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
]]>
ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ ಪರಿಹಾರ ಪಾವತಿಸಲು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ನಿರ್ದೇಶಕರು, ಕೆ ಎಸ್ ಎನ್ ಡಿ ಸಿ ಅವರಿಗೆ ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ. ಈ ಮೂಲಕ ನೆರೆಹಾನಿಯಿಂದ ಬೆಳೆಹಾನಿಗೊಂಡ ರೈತರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಕೇಂದ್ರ ಸರ್ಕಾರದ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 2024-25 ನೇ ಸಾಲಿನಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಕೇಂದ್ರ ಸರ್ಕಾರದಿಂದ 2 ನೇ ಕಂತಿನ ಅನುದಾನ ರೂ. 366.00 ಕೋಟಿಗಳನ್ನು ಮೇಲೆ ಓದಲಾದ (7) ರ ಪತ್ರದಲ್ಲಿ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುತ್ತದೆ. ಮೇಲೆ ಓದಲಾದ (8) ರ ಹಿಂಬರಹದಲ್ಲಿ ಆರ್ಥಿಕ ಇಲಾಖೆಯು 2 ನೇ ಕಂತಿನ ರಾಜ್ಯದ ಪಾಲು ರೂ. 122.00 ಕೋಟಿಗಳನ್ನು ಬಿಡುಗಡೆ ಮಾಡಿರುತ್ತದೆ.
ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಕರಾವಳಿ : ಕಾಸರಗೋಡು ಬಿಸಿಲು ಹಾಗೂ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ. ದ. ಕ. ಉಳಿದ ಭಾಗಗಳಲ್ಲಿ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಎಪ್ರಿಲ್ 1 ಅಥವಾ 2ರಿಂದ ಮತ್ತೆ ಮಳೆ ಪ್ರಾರಂಭವಾಗುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಎಪ್ರಿಲ್ 2ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮೈಸೂರು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಎಪ್ರಿಲ್ 2ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.
ಎಪ್ರಿಲ್ ಮೊದಲ ವಾರದಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯು ಆರಂಭವಾಗುವ ಲಕ್ಷಣಗಳಿವೆ.
ಕೇಂದ್ರ ಸರ್ಕಾರದ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 2024-25 ನೇ ಸಾಲಿನಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಕೇಂದ್ರ ಸರ್ಕಾರದಿಂದ 2 ನೇ ಕಂತಿನ ಅನುದಾನ ರೂ. 366.00 ಕೋಟಿಗಳನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುತ್ತದೆ ಹಾಗೂ ಆರ್ಥಿಕ ಇಲಾಖೆಯು 2 ನೇ ಕಂತಿನ ರಾಜ್ಯದ ಪಾಲು ರೂ. 122.00 ಕೋಟಿಗಳನ್ನು ಬಿಡುಗಡೆ ಮಾಡಿರುತ್ತದೆ.
ಮಳೆಯಾಶ್ರಿತ ಬೆಳೆಗೆ ಎರಡು ಹೆಕ್ಟರಿಗೆ ಸೀಮಿತವಾಗಿ ಪ್ರತಿ ಹೆಕ್ಟರಿಗೆ 8500 ರೂಪಾಯಿ ಪರಿಹಾರ ನೀಡಲಾಗುತ್ತದೆ.
ನೀರಾವರಿ ಬೆಳೆಗೆ ಪ್ರತಿ ಹೆಕ್ಟರಿಗೆ 17000 ರೂಪಾಯಿ.
ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟರಿಗೆ 22,000
ರೇಷ್ಮೆ ಬೆಳೆಗೆ ಪ್ರತಿ ಹೆಕ್ಟರಿಗೆ 6000 ಪರಿಹಾರ ಮೊತ್ತ ನಿಗದಿಪಡಿಸಲಾಗಿದೆ
ಬೆಳೆ ಪರಿಹಾರ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://landrecords.karnataka.gov.in/PariharaPayment/
ನಂತರ ಆಧಾರ್ ನಂಬರ್ select ಮಾಡಿ
ನಂತರ calamity type "Flood" ಎಂದು ವರ್ಷ "2024-25" ಎಂದು select ಮಾಡಿ
ನಿಮ್ಮ ಆಧಾರ್ ನಂಬರ್ ಹಾಕಿ,Captch type ಮಾಡಿ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ಬರಪರಿಹಾರ ಜಮಾ ತೋರಿಸುತ್ತದೆ
ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ ಪರಿಹಾರ ಪಾವತಿಸಲು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ನಿರ್ದೇಶಕರು, ಕೆ ಎಸ್ ಎನ್ ಡಿ ಸಿ ಅವರಿಗೆ ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ. ಈ ಮೂಲಕ ನೆರೆಹಾನಿಯಿಂದ ಬೆಳೆಹಾನಿಗೊಂಡ ರೈತರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಸಂಬಂಧ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಿಂದ ಸ್ಥಳೀಯವಾಗಿ ಉಂಟಾಗುವ ಬೆಳೆ ಹಾನಿಗೆ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ: 11.07.2023 ರಂದು ಹೊರಡಿಸಿರುವ Revised Items of Expenditure and Norms of assistance from the State Disaster Response Fund (SDRF) ರ ಮಾರ್ಗಸೂಚಿಗಳನ್ವಯ ನಿಯಮಾನುಸಾರ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಪಾವತಿಸಬಹುದಾದ ಪರಿಹಾರ ಮೊತ್ತವನ್ನು ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಪರಿಹಾರ ತಂತ್ರಾಂಶದ ಮುಖಾಂತರ ಮಾತ್ರವೇ ನಿಯಮಾನುಸಾರ ಅರ್ಹ ರೈತ ಫಲಾನುಭವಿಗಳಿಗೆ ಅರ್ಹತೆಗನುಗುಣವಾಗಿ ಪಾವತಿಸಲು, ಕಾರ್ಯವಿಧಾನ ಹಾಗೂ ಷರತ್ತು ನಿಬಂಧನೆಗಳನ್ನು ಮೇಲೆ ಓದಲಾದ (1) ರ ಆದೇಶದಲ್ಲಿ ನಿಗದಿಪಡಿಸಲಾಗಿದೆ ಎಂದಿದ್ದಾರೆ.
ಮುಂಬರುವ ದಿನಗಳಲ್ಲಿ ನೈಸರ್ಗಿಕ ವಿಕೋಪಗಳಿಂದಾಗಿ ಉಂಟಾಗುವ ಮೂಲಭೂತ ಸೌಕರ್ಯಗಳ ಹಾನಿ ಹಾಗೂ ಬೆಳೆ ಹಾನಿಗಳಿಗೆ ನಿಯಮಾನುಸಾರ ಪರಿಹಾರ ಪಾವತಿಸಲು ಅನುದಾನ ಬಿಡುಗಡೆಗೊಳಿಸುವಂತೆ ಮೇಲೆ ಓದಲಾದ (2) ರಿಂದ (7) ರ ಪತ್ರಗಳಲ್ಲಿ, ಹಾಸನ, ಬೀದರ್, ಶಿವಮೊಗ್ಗ, ಧಾರವಾಡ, ಮೈಸೂರು ಹಾಗೂ ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಕೋರಿರುತ್ತಾರೆ.
ಕೇಂದ್ರ ಸರ್ಕಾರದ 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 2024-25 ನೇ ಸಾಲಿನಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಕೇಂದ್ರ ಸರ್ಕಾರದಿಂದ 2 ನೇ ಕಂತಿನ ಅನುದಾನ ರೂ. 366.00 ಕೋಟಿಗಳನ್ನು ಮೇಲೆ ಓದಲಾದ (7) ರ ಪತ್ರದಲ್ಲಿ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುತ್ತದೆ. ಮೇಲೆ ಓದಲಾದ (8) ರ ಹಿಂಬರಹದಲ್ಲಿ ಆರ್ಥಿಕ ಇಲಾಖೆಯು 2 ನೇ ಕಂತಿನ ರಾಜ್ಯದ ಪಾಲು ರೂ. 122.00 ಕೋಟಿಗಳನ್ನು ಬಿಡುಗಡೆ ಮಾಡಿರುತ್ತದೆ.
ವಿವತ್ತು ನಿರ್ವಹಣೆಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರದ ಗ್ರಹ ಮಂತ್ರಾಲಯವು ಹೊರಡಿಸಿರುವ ಮಾರ್ಗಸೂಚಿಗಳನ್ವಯ ವಿಪತ್ತು ನಿರ್ವಹಣೆಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಿರ್ದೇಶಕರು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ರವರಿಗೆ ಹಾಗೂ ನೈಸರ್ಗಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ತಕ್ಷಣ ನಿಭಾಯಿಸಲು ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡುವುದು ಅವಶ್ಯಕವಾಗಿರುತ್ತದೆ.
ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಿರ್ದೇಶಕರು, ಕೆಎಸ್ಎನ್ಡಿಎಂಸಿ ರವರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯ ಲೆಕ್ಕ ಶೀರ್ಷಿಕೆ 2245-80-102-0-01-051 ರಲ್ಲಿ Oo.25.00 ಕೋಟಿಗಳ ಅನುದಾನ ಬಿಡುಗಡೆಗೊಳಿಸಲು ಹಾಗೂ ಮುಂದಿನ ದಿನಗಳಲ್ಲಿ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ ನಿಯಮಾನುಸಾರ ತಕ್ಷಣ ಸ್ಪಂದಿಸಲು ಹಾಗೂ ಭಾರತ ಸರ್ಕಾರದ ಗ್ರಹ ಮಂತ್ರಾಲಯವು ಹೊರಡಿಸಿರುವ ಮಾರ್ಗಸೂಚಿಗಳನ್ವಯ ಪರಿಹಾರವನ್ನು ಪಾವತಿಸಲು ಹಾಗೂ ತುರ್ತು ಕ್ರಮಗಳನ್ನು ಕೈಗೊಳ್ಳಲು ಅನುವಾಗುವಂತೆ ರಾಜ್ಯ ವಿಪತ್ತು ಪರಿಹಾರ ನಿಧಿಯ ಲೆಕ್ಕ ಶೀರ್ಷಿಕೆ 2245-80-102-0-01- 059 ರಲ್ಲಿ ಹಾಗೂ ಲೆಕ್ಕ ಶೀರ್ಷಿಕೆ 2245-80-102-0-01-140 ರಲ್ಲಿ ಲಭ್ಯವಿರುವ ಅನುದಾನದಿಂದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಅನುದಾನ ಬಿಡುಗಡೆಗೊಳಿಸಲು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಭಾರತ ಸರ್ಕಾರದ ಗ್ರಹ ಮಂತ್ರಾಲಯವು ಹೊರಡಿಸಿರುವ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ (Capacity Building) ಮಾರ್ಗಸೂಚಿಯನ್ವಯ ಸನ್ನದ್ಧತೆ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ರೂ. 25.00 ಕೋಟಿಗಳನ್ನು (ಇಪ್ಪತ್ತೈದು ಕೋಟಿಗಳು ಮಾತ್ರ) ನಿರ್ದೇಶಕರು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ರವರಿಗೆ ಲೆಕ್ಕ ಶೀರ್ಷಿಕೆ 2245-80-102-0-01-051 ರಲ್ಲಿ ಹಾಗೂ ಮುಂದಿನ ದಿನಗಳಲ್ಲಿ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ ನಿಯಮಾನುಸಾರ ತಕ್ಷಣ ಸ್ಪಂದಿಸಲು ಭಾರತ ಸರ್ಕಾರದ ಗ್ರಹ ಮಂತ್ರಾಲಯವು ಹೊರಡಿಸಿರುವ ಮಾರ್ಗಸೂಚಿಗಳನ್ವಯ ಪರಿಹಾರವನ್ನು ಪಾವತಿಸಲು ಹಾಗೂ ತುರ್ತು ಕ್ರಮಗಳನ್ನು ಕೈಗೊಳ್ಳಲು ಅನುವಾಗುವಂತೆ ಲೆಕ್ಕ ಶೀರ್ಷಿಕೆ 2245-80-102-0-01-059 ರಲ್ಲಿ ಹಾಗೂ ಲೆಕ್ಕ ಶೀರ್ಷಿಕೆ 2245-80-102-0-01-140 ರಲ್ಲಿ ಲಭ್ಯವಿರುವ ಅನುದಾನದಿಂದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಕೆಳಗಿನ ಷರತ್ತುಗಳ ಪಾಲನೆಗೊಳಪಟ್ಟು ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ.
Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
]]>
ರಾಜ್ಯದಲ್ಲಿ ಹೈನೋದ್ಯಮಕ್ಕೆ ವಿಶೇಷ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ರೈತರ ಆರ್ಥಿಕ ಸದೃಢತೆಗಾಗಿ ಹಾಲು ಉತ್ಪಾದನೆ ಮತ್ತು ಸಂಸ್ಕರಣಾ ವೆಚ್ಚಗಳನ್ನು ಪರಿಗಣಿಸಿ ನಂದಿನಿ ಹಾಲು ಮತ್ತು ಮೊಸರಿನ ದರ ಪರಿಷ್ಕರಣೆ ಮಾಡಲಾಗಿದೆ ಎಂಬುದಾಗಿ ಸರ್ಕಾರ ಸ್ಪಷ್ಟ ಪಡಿಸಿದೆ.
ಮುಂಬರುವ ಏಪ್ರಿಲ್ 1ರಿಂದ ರಾಜ್ಯದಲ್ಲಿ ನಂದಿನಿ ಹಾಲಿನ ದರವು ₹4 ಹೆಚ್ಚಳವಾಗಲಿದ್ದು, ಇಲ್ಲಿ ಏರಿಕೆಯಾಗುವ ದರದ ಲಾಭವು ರೈತರನ್ನು ತಲುಪಲಿದೆ. ದರ ಏರಿಕೆಯ ನಂತರವೂ ಒಂದು ಲೀಟರ್ ಹಾಲಿನ ಬೆಲೆ ₹46 ಆಗಲಿದ್ದು, ಇದು ಬೇರೆಲ್ಲಾ ರಾಜ್ಯಗಳಿಗಿಂತಲೂ ಕಡಿಮೆಯಿರಲಿದೆ ಎಂದಿದೆ.
ಈ ಹಿಂದೆ ಬಿಜೆಪಿ ಸರ್ಕಾರ 700 ಕೋಟಿ ರೂಪಾಯಿ ರೈತರ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿತ್ತು. ಅದನ್ನು ನಾವು ಬಿಡುಗಡೆ ಮಾಡಿದ್ದೇವೆ. ಈಗ ಏನೋ 600 ಕೋಟಿ ರೂಪಾಯಿ ಬಾಕಿ ಇದೆ ಅಂತ ಕೇಳಿದ್ದೇನೆ. ಆದಷ್ಟು ಬೇಗ ಬಾಕಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು.
Milk incentive status-ಇಲ್ಲಿಯವರೆಗೂ ಜಮಾ ಆಗಿರುವ ಹಾಲಿನ ಪ್ರೋತ್ಸಾಹಧನ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ "ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಪ್ರೋತ್ಸಾಹಧನ ಮಾಹಿತಿ ಸಿಗಲಿದೆ.
ಹೀಗೂ ಚೆಕ್ ಮಾಡಬಹುದು
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/Klda/MilkIncentive?ServiceId=5399&Type=TABLE&DepartmentId=3119
ನಂತರ ನಿಮ್ಮ ಜಿಲ್ಲೆ,ತಾಲೂಕು,Milk Union,ಗ್ರಾಮ, select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ನಿಮ್ಮ ಗ್ರಾಮದಲ್ಲಿ ಯಾರಿಗೆಲ್ಲಾ ಎಷ್ಟು ಹಾಲಿನ ಪ್ರೋತ್ಸಾಹಧನ(Milk incentive) ಬಂದಿದೆ ಎಂದು ತಿಳಿಯಲಿದೆ
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>Bele parihara-2.01 ಲಕ್ಷ ರೈತರ ಖಾತೆಗೆ 76.34 ಕೋಟಿ ಬೆಳೆ ಹಾನಿ ಪರಿಹಾರ ಜಮಾ
4.36 ಲಕ್ಷ ರೈತರು ತೊಗರಿ, ಹೆಸರು, ಉದ್ದು, ಸೋಯಾಬೀನ್ ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ, ಈ ಪೈಕಿ ಸ್ಥಳೀಯ ಪ್ರಕೃತಿ ವಿಕೋಪದಡಿ ದೂರುಗಳನ್ನು ಸಲ್ಲಿಸಿದ 2,01,847 ರೈತರಿಗೆ ಮಧ್ಯಂತರ ಪರಿಹಾರವಾಗಿ ರೂ. 76.34 ಕೋಟಿ ಪರಿಹಾರ ಈಗಾಗಲೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ರೈತವಾರು ಮಾಹಿತಿಯನ್ನು ಸಂರಕ್ಷಣಾ ಪೆೋರ್ಟನಲ್ಲಿ ದಾಖಲಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೀಯೇ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
2024-25 ನೇ ಸಾಲಿನಲ್ಲಿ ಅಗಸ್ಟ್ ಕೊನೆಯ ವಾರ ಹಾಗೂ ಸೆಪ್ಟಂಬರ್ ತಿಂಗಳ ಮೊದಲನೆ ವಾರದಲ್ಲಿ ಸುರಿದ ಹೆಚ್ಚಿನ ಮಳೆಯಿಂದಾಗಿ ಒಟ್ಟು 16373 ಹೆಕ್ಟೇರ್ನಷ್ಟು ಬೆಳೆ ಹಾನಿಯಾಗಿದ್ದು, ರಾಷ್ಟ್ರೀಯ ಹಾಗೂ ರಾಜ್ಯ ಬರ ಪರಿಹಾರ ನಿಧಿ ಮಾರ್ಗಸೂಚಿಯಂತೆ 35,086 ರೈತರಿಗೆ 13.47 ಕೋಟಿ ರೂ. ಪರಿಹಾರವನ್ನು ನೀಡಲಾಗಿದೆ ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.
Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಕೃಷಿ ಸಚಿವ ಚಲುವರಾಯಸ್ವಾಮಿ ಅವರು, ರೈತರಿಗೆ ಡಬಲ್ ಖುಷಿ ಸುದ್ದಿ ಕೊಟ್ಟಿದ್ದಾರೆ. ನಗರದಲ್ಲಿ ಇಂದು ನಡೆದ ಸಭೆಯಲ್ಲಿ ರಾಗಿ, ಜೋಳ, ತೊಗರಿಗೆ MSP ದರ ನಿಗದಿ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ, ರಾಗಿ, ಜೋಳ, ತೊಗರಿ ಖರೀದಿ ಮಾಡುತ್ತಿದ್ದೇವೆ. 7550 ರೂ. ತೊಗರಿಗೆ ಕೇಂದ್ರ ನಿಗದಿ ಮಾಡಿದೆ. ಇದಕ್ಕೆ 450 ರೂ. ಹೆಚ್ಚುವರಿ ಕೊಟ್ಟು ಖರೀದಿ ಮಾಡುತ್ತಿದ್ದೇವೆ. ಜಿಯೋ ಟ್ಯಾಗ್ ಕೊಟ್ಟು ಖರೀದಿ ಮಾಡಲಾಗುತ್ತೆ. ರಾಗಿಯನ್ನ 20 ಕ್ವಿಂಟಾಲ್ ನಿಂದ 30 ಕ್ವಿಂಟಾಲ್ ಖರೀದಿಗೆ ಮುಂದಾಗಿದ್ದೇವೆ ಎಂದು ಮಾಹಿತಿ ನೀಡಿದರು.
ಇನ್ನು ಇದೇ ವೇಳೆ ರೈತರಿಗೆ ಮತ್ತೊಂದು ಗುಡನ್ಯೂಸ್ ನೀಡಿದ್ದಾರೆ. ಬೆಂಗಳೂರಿನ ಕಾವೇರಿ ಆಸ್ಪತ್ರೆಯು CSR ಫಂಡ್ ನಲ್ಲಿ 100 ಜನ ರೈತರಿಗೆ ಮಂಡಿ ಚಿಪ್ಪು ಸಮಸ್ಯೆಗೆ ಉಚಿತ ಶಸ್ತ್ರ ಚಿಕಿತ್ಸೆ ಮಾಡಲು ಮುಂದಾಗಿದ್ದಾರೆ. 15 ಕೋಟಿ ರೂ. ವೆಚ್ಚದಲ್ಲಿ 100 ರಿಂದ 150 ಜನ ರೈತರಿಗೆ ಶಸ್ತ್ರ ಚಿಕಿತ್ಸೆ ಮಾಡುತ್ತೇವೆ. ರೋಬೋಟಿಕ್ ಮೂಲಕ ಚಿಕಿತ್ಸೆ ನೀಡುತ್ತಿದ್ದು, ಓರ್ವ ರೋಗಿಗೆ 3- 4 ಲಕ್ಷ ಆಗುತ್ತದೆ. ಆಯಾ ತಾಲ್ಲೂಕು, ಜಿಲ್ಲಾ ಹೆಡ್ ಕ್ವಾಟ್ರಸ್ ನಿಂದ ಪ್ರಕ್ರಿಯೆ ಶುರುವಾಗಲಿದೆ ಎಂದಿದ್ದಾರೆ.
ಚಿಕಿತ್ಸೆ ಒಳಗಾಗುವವಿಗೆ ಬೇಕಾಗುವ ದಾಖಲೆಗಳು:-
ಆಧಾರ್ ಕಾರ್ಡ್ ಅಥವಾ ಗುರುತಿನ ಚೀಟಿ
MSP for bilijola-ಕನಿಷ್ಟ ಬೆಂಬಲ ಯೋಜನೆಯಡಿ ಬಿಳಿಜೋಳ ಖರೀದಿ,ಮಾರಾಟ,ಹಣ ಪಾವತಿಯ ಸಂಪೂರ್ಣ ಮಾಹಿತಿ
ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಆದೇಶ ಮಾಡಿದೆ.
ಜಿಲ್ಲಾ ಟಾಸ್ಕ್ಫೋರ್ಸ್ಗಳ ಶಿಫಾರಸ್ಸಿನಂತೆ ವಿಜಯಪುರ, ಕಲಬುರಗಿ, ಬಾಗಲಕೋಟೆ, ಯಾದಗಿರಿ, ಬೀದರ್, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಬೆಳಗಾವಿ, ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ.
ರೈತಬಾಂಧವರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಬಿಳಿಜೋಳವನ್ನು ಮಾರಾಟ ಮಾಡದೇ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಸರ್ಕಾರದ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.
ಬೆಂಬಲ ಬೆಲೆ ಎಷ್ಟು?
ಹೈಬ್ರಿಡ್ ಜೋಳ ರೂ.3,371/- (ಪ್ರತಿ ಕ್ವಿಂಟಾಲ್ ಗೆ)
ಮಾಲ್ದಂಡಿ ಜೋಳ ರೂ.3,421/- (ಪ್ರತಿ ಕ್ವಿಂಟಾಲ್ಗೆ)
ಪ್ರತಿ ಎಕರೆಗೆ ನಿಗದಿಪಡಿಸಿರುವ ಪ್ರಮಾಣ : 20 ಕ್ವಿಂಟಾಲ್
ಪ್ರತಿ ರೈತರಿಂದ ಖರೀದಿ ಪ್ರಮಾಣ : 150 ಕ್ವಿಂಟಾಲ್
ಮಾರಾಟ ಹೇಗೆ?
ಫೂಟ್ಸ್ ಐ.ಡಿ. ಯೊಂದಿಗೆ ಬಯೋಮೆಟ್ರಿಕ್ ನೀಡಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿ. ಅಧಾರ್ ಜೋಡಣೆಯಾದ ಎನ್.ಸಿ.ಪಿ.ಐ. ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಖಾತರಿಪಡಿಸಿ. ಎಫ್.ಎ.ಕ್ಕೂ ಗುಣಮಟ್ಟದ ಬಗ್ಗೆ ಗ್ರೇಡರ್ ಪರಿಶೀಲಿಸಿ ದೃಢೀಕರಿಸಿದ ನಂತರ ಖರೀದಿ.ಮದ್ಯವರ್ತಿಗಳು ಖರೀದಿ ಕೇಂದ್ರಗಳನ್ನು ದುರ್ಬಳಕೆ ಮಾಡಿಕೊಂಡರೆ ಕಾನೂನು ಕ್ರಮ ಜರುಗಿಸಲಾಗುವುದು.
ಹಣ ಪಾವತಿ ಹೇಗೆ?
ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ಹಣ ನೇರವಾಗಿ ಜಮೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಉಚಿತ ದೂರವಾಣಿ ಸಂಖ್ಯೆಗೆ 1800 425 1552 ಕರೆ ಮಾಡಬಹುದಾಗಿದೆ.
ಕರಾವಳಿ : ಕಾಸರಗೋಡು ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಗುಡುಗು ಸಹಿತ ಒಂದೆರಡು ಕಡೆ ಸಂಜೆ, ರಾತ್ರಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಗುಡುಗು ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ
ಈಗಿನಂತೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಪ್ರಿಲ್ 3ರಿಂದ ಮತ್ತೆ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಹಾಸನದ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗಿನೊಂದಿಗೆ ತುಂತುರು ಮಳೆ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಪ್ರಿಲ್ 3ರಿಂದ ಮತ್ತೆ ಚುರುಕಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ದಕ್ಷಿಣ ಒಳನಾಡಿನ ಚಾಮರಾಜನಗರದ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ
ಈಗಿನಂತೆ ಎಪ್ರಿಲ್ 3ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಕಳೆದ ಕೆಲವು ದಿನಗಳ ಹಿಂದೆ ಗೃಹಲಕ್ಷ್ಮಿ ಯೋಜನೆಯ(Gruhalakshmi yojane) ಹಣ 2 ತಿಂಗಳ ಹಿಂದಿನ ಕಂತು ಜಮೆ ಆಗಿತ್ತು. ಆದರೆ ಇತ್ತೀಚಿನ 2 ಕಂತುಗಳ ಹಣ ಇನ್ನು ಜಮೆ ಆಗಿಲ್ಲ ಎಂಬುದು ಯಜಮಾನಿಯರ ಆರೋಪವಾಗಿದೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರು ಇನ್ನೊಂದು ವಾರ ಅಂದರೆ ಮಾರ್ಚ್ 31ರ ಬಳಿಕ 2 ಕಂತುಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ
ಹೌದು ಈ ಕುರಿತು ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ಬಳಿಕ ಅಂದರೆ ಇನ್ನೊಂದು ವಾರ ಬಿಟ್ಟು ಹಾಕಲಾಗುತ್ತದೆ. ಈಗಾಗಲೇ ಹಿಂದಿನ 2 ಕಂತುಗಳ ಹಣ ಖಾತೆಗೆ ಹಾಕಲಾಗಿದೆ. ಇನ್ನು ಉಳಿದ 2 ಕಂತುಗಳ ಹಣವನ್ನು ಮಾರ್ಚ್ 31 ರ ನಂತರ ಅಕೌಂಟಿಗೆ ಹಾಕಲಾಗುತ್ತದೆ ಎಂದು ಅವರು ಸ್ಪಷ್ಟನೆ ನೀಡಿದರು.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ ಹತ್ತು ದಿನಗಳ ಕಾಲ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಯನ್ನು ದಿನಾಂಕ 15/4/2025 ರಿಂದ 24/4/2025 ವರೆಗೆ ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ಕಲಿಸುವ ವಿಷಯಗಳು
1)ಹೈನು ರಾಸು ತಳಿಗಳು
2)ಹೈನು ರಾಸುಗಳಿಗೆ ಬರುವಂತಹ ವಿವಿಧ ರೋಗಗಳು
3)ಕೃತಕ ಗರ್ಭದಾರಣೆ
4) ಕರುಗಳ ಪಾಲನೆ ಪೋಷಣೆ
5)ವಿವಿಧ ಔಷಧ ಉಪಚಾರಗಳು
6)ಆಕಳು ಶಡ್ ನಿರ್ಮಾಣ
7) ಗರ್ಭಧರಿಸಿದ ರಾಸುಗಳ ಪಾಲನೆ ಪೋಷಣೆ
8) ಸಾವಯುವ ಕೃಷಿ ಪದ್ಧತಿ
9) ಎರೆಹುಳು ಘಟಕ ನಿರ್ಮಾಣ, ಎರೆ ಹುಳುಗಳ ವಿಧಗಳು, ಗೊಬ್ಬರ ತಯಾರಿಸುವ ವಿಧಾನ
10) ಸೂಕ್ತ ಆಹಾರ ಕ್ರಮಗಳು
11)ಲೋನ್ ಗಳ ಮಾಹಿತಿ,ಸಬ್ಸಿಡಿಗಳ ಮಾಹಿತಿ, ಪ್ರಾಜೆಕ್ಟ್ ರಿಪೋರ್ಟ್ ಮಾಹಿತಿ
ಇನ್ನು ಇತರೆ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು
ಆಸಕ್ತರು ಕೂಡಲೇ ಕೆಳಗಡೆ ನಮೂದಿಸಿದ ಮೊಬೈಲ್ ನಂಬರ್ ಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಿ
8660219375
2024-25 ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿಯಲ್ಲಿ ಹಾಲು ಕರೆಯುವ ಯಂತ್ರ(Milking machine), ರಬ್ಬರ್ ನೆಲಹಾಸು(Rubber mat) ಹಾಗೂ ಸೈಲೇಜ್ ಬ್ಯಾಗ್ಗಳನ್ನು(Silage bag) ವಿತರಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ(Vetarnary department)ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಾಲು ಕರೆಯುವ ಯಂತ್ರ ತಲಾ 1 ರಂತೆ, ರಬ್ಬರ್ ನೆಲಹಾಸು ತಲಾ 2 ರಂತೆ ಹಾಗೂ ಸೈಲೇಜ್ ಬ್ಯಾಗ್ ತಲಾ 100 ಕೆಜಿ ಸಾಮರ್ಥ್ಯದ 1 ಹಾಗೂ 500 ಕೆಜಿ ಸಾಮರ್ಥ್ಯದ 1 ಬ್ಯಾಗ್ ಅನ್ನು ನೀಡಲಾಗುತ್ತದೆ. ಸದರಿ ಫಲಾನುಭವಿಗಳ ಆಯ್ಕೆಯಲ್ಲಿ ರೋಸ್ಟರ್ ನಿಯಾಮಾನುಸಾರದ ಕ್ರಮ ವಹಿಸಲಿದ್ದು, ಆಸಕ್ತರು ತಮ್ಮ ಸ್ಥಳೀಯ ಪಶುವೈದ್ಯಾಧಿಕಾರಿಗಳಿಂದ/ಮುಖ್ಯ ಪಶುವೈದ್ಯಾಧಿಕಾರಿಗಳು ಇವರಿಂದ ಅರ್ಜಿ ನಮೂನೆಯನ್ನು ಪಡೆದು ಎಲ್ಲಾ ದಾಖಲಾತಿಗಳೊಂದಿಗೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮುಖ್ಯ ಪಶು ವೈದ್ಯಾಧಿಕಾರಿಗಳ ಈ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು(Cow) ಅಥವಾ ಎಮ್ಮೆ(Buffelow) ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.
ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
Vetarnary department schemes 2025-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ
ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahvs.karnataka.gov.in/info-2/Schemes+&+Benefits/kn
National livestock mission 2024-ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆ,ಕುರಿ,ಕೋಳಿ,ಮೇಕೆ,ಹಂದಿ ಸಾಕಾಣೆಕೆಗೆ ಅರ್ಜಿ ಆಹ್ವಾನ
ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ, ಮೇಕೆ, ಹಂದಿ ಸಾಕಾಣಿಕೆ ಮತ್ತು ರಸಮೇವು ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.
National livestock mission
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ
(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)
ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.
ಅವಶ್ಯಕ ದಾಖಲಾತಿಗಳು :-
1)ಆಧಾರ,
2)ಪಹಣಿ ಪತ್ರ
3)ಬ್ಯಾಂಕ್ಖಾತೆ ಸಂಖ್ಯೆ,
ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು
4)ಭಾವ ಚಿತ್ರ.
ಕ್ರ.ಸಂ |
ಘಟಕ |
ಸೌಲಭ್ಯಗಳ ವಿವರ |
|
ಹೈನುಗಾರಿಕೆ |
|
1 |
ಮಿಶ್ರತಳಿ ದನಗಳ ನಿರ್ವಹಣೆ (1+1) |
ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ |
|
ಆ. ಸುಧಾರಿತ ಎಮ್ಮೆಗಳ ನಿರ್ವಹಣೆ |
ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ |
|
ಕುರಿ ಸಾಕಾಣಿಕೆ |
|
2 |
ಕುರಿಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ |
|
ಕುರಿಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (10) |
ರೂ. 13,000 ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (20) |
ರೂ. 26,000 ರಂತೆ ಸಾಲ ಸೌಲಭ್ಯ |
|
ಮೇಕೆ ಸಾಕಾಣಿಕೆ |
|
3 |
ಮೇಕೆಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ |
|
ಮೇಕೆಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ |
4 |
ಹಂದಿ ಸಾಕಾಣಿಕೆ (10) |
ರೂ,60,000 ರಂತೆ ಸಾಲ ಸೌಲಭ್ಯ |
|
ಕೋಳಿ ಸಾಕಾಣಿಕೆ |
|
5 |
ಮಾಂಸದ ಕೋಳಿ ಸಾಕಾಣಿಕೆ |
2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ |
|
ಮೊಟ್ಟೆ ಕೋಳಿ ಸಾಕಾಣಿಕೆ |
1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ |
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.
ಈ ಮಾಹಿತಿ ನಿಮಗೆ ಉಪಯೋಗವಾಗಿದ್ದರೆ ಬೇರೆಯವರಿಗೂ ಹಂಚಿಕೊಳ್ಳಿ ಧನ್ಯವಾದಗಳು
]]>ತೊಗರಿ, ಹೆಸರು, ಉದ್ದು, ಸೋಯಾಬೀನ್ ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆದಿದ್ದ ಕಲಬುರಗಿ ಜಿಲ್ಲೆಯ 2,04,073 ರೈತರು ಬೆಳೆ ವಿಮೆ ಯೋಜನೆಯಡಿ ವಿಮೆ ಪರಿಹಾರ ಕೋರಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೋಂದಾವಣೆ ಮಾಡಿಕೊಂಡಿದ್ದು 575.194 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಹಾಗೂ ಬೆಳೆಹಾನಿ ಸೇರಿದಂತೆ 2,36,933 ರೈತರಿಗೆ ಒಟ್ಟು ರೂ. 667.73 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ, ರಾಜ್ಯ ಸರ್ಕಾರದಿಂದ ಜಿಲ್ಲೆಯ ರೈತರಿಗೆ ಇಷ್ಟು ದೊಡ್ಡ ಮೊತ್ತದ ಬೆಳೆ ವಿಮೆ ಪರಿಹಾರ ನೀಡುವ ಮೂಲಕ ದಾಖಲೆ ಸೃಷ್ಟಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಜಿಲ್ಲೆಯಲ್ಲಿ 4.36 ಲಕ್ಷ ರೈತರು ತೊಗರಿ, ಹೆಸರು, ಉದ್ದು, ಸೋಯಾಬೀನ್ ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ, ಈ ಪೈಕಿ ಸ್ಥಳೀಯ ಪ್ರಕೃತಿ ವಿಕೋಪದಡಿ ದೂರುಗಳನ್ನು ಸಲ್ಲಿಸಿದ 2,01,847 ರೈತರಿಗೆ ಮಧ್ಯಂತರ ಪರಿಹಾರವಾಗಿ ರೂ. 76.34 ಕೋಟಿ ಪರಿಹಾರ ಈಗಾಗಲೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ರೈತವಾರು ಮಾಹಿತಿಯನ್ನು ಸಂರಕ್ಷಣಾ ಪೆೋರ್ಟನಲ್ಲಿ ದಾಖಲಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೀಯೇ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
2024-25 ನೇ ಸಾಲಿನಲ್ಲಿ ಅಗಸ್ಟ್ ಕೊನೆಯ ವಾರ ಹಾಗೂ ಸೆಪ್ಟಂಬರ್ ತಿಂಗಳ ಮೊದಲನೆ ವಾರದಲ್ಲಿ ಸುರಿದ ಹೆಚ್ಚಿನ ಮಳೆಯಿಂದಾಗಿ ಒಟ್ಟು 16373 ಹೆಕ್ಟೇರ್ನಷ್ಟು ಬೆಳೆ ಹಾನಿಯಾಗಿದ್ದು, ರಾಷ್ಟ್ರೀಯ ಹಾಗೂ ರಾಜ್ಯ ಬರ ಪರಿಹಾರ ನಿಧಿ ಮಾರ್ಗಸೂಚಿಯಂತೆ 35,086 ರೈತರಿಗೆ 13.47 ಕೋಟಿ ರೂ. ಪರಿಹಾರವನ್ನು ನೀಡಲಾಗಿದೆ ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.
Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮಾರ್ಚ್ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ.
ಮಾರ್ಚ್ 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.
ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. https://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ.
ಸದಸ್ಯರ ಸೇರ್ಪಡೆ
* ಪೋಟೋ ಬದಲಾವಣೆ
* ಹೆಸರು ಡಿಲೆಟ್
* ಅಂಗಡಿ. ನಂ. ಬದಲಾವಣೆ
* ಹೆಸರು ತಿದ್ದುಪಡಿ
* ಮುಖ್ಯಸ್ಥರ ಬದಲಾವಣೆ
ಅರ್ಜಿ ಸಲ್ಲಿಸಲು ದಾಖಲಾತಿಗಳು
1. ಸದಸ್ಯರ ಆಧಾರ ಕಾರ್ಡ್ ಕಡ್ಡಾಯ
2. ಸದಸ್ಯರ ಜಾತಿ ಮತ್ತು ಆದಾಯ 6 ವರ್ಷ ಮೆಲ್ಪಟ್ಟವರಿಗೆ
3. ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ.
ರೇಷನ್ ಕಾರ್ಡ್ ನಲ್ಲಿ ಹೆಂಡತಿ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ
ಆಧಾರ್ ಕಾರ್ಡ್
ಮದುವೆ ಪ್ರಮಾಣ ಪತ್ರ
ಪೋಷಕರ ಪಡಿತರ ಚೀಟಿ ಅಗತ್ಯ.
ಪಡಿತರ ಚೀಟಿಗೆ ಮಗುವಿನ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ
ಮಗುವಿನ ಜನನ ಪ್ರಮಾಣಪತ್ರ
ಹೆತ್ತವರ ಆಧಾರ್ ಕಾರ್ಡ್
ಈ ಪ್ರಕ್ರಿಯೆಯನ್ನು ಅನುಸರಿಸಿ
ಆನ್ಲೈನ್ನಲ್ಲಿ ಪಡಿತರ ಚೀಟಿಗೆ ನಿಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಸೇರಿಸಲು, ನೀವು ನಿಮ್ಮ ರಾಜ್ಯದ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. ಇದರ ನಂತರ ನೀವು ID ಅನ್ನು ರಚಿಸಬೇಕಾಗುತ್ತದೆ. ನಿಮ್ಮ ಐಡಿಯನ್ನು ಈಗಾಗಲೇ ರಚಿಸಿದ್ದರೆ ನೀವು ಲಾಗಿನ್ ಆಗಬೇಕು. ಇದರ ನಂತರ ನಿಮ್ಮ ಪಡಿತರ ಚೀಟಿಯ ವಿವರಗಳನ್ನು ನೀವು ನೋಡುತ್ತೀರಿ, ಅದರಲ್ಲಿ ನೀವು ಹೊಸ ಸದಸ್ಯರನ್ನು ಸೇರಿಸುವ ಆಯ್ಕೆಯನ್ನು ಪಡೆಯುತ್ತೀರಿ. ನೀವು ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ, ಇದರ ನಂತರ ನೀವು ಹೊಸ ಸದಸ್ಯರನ್ನು ಸೇರಿಸಲು ಫಾರ್ಮ್ ಅನ್ನು ಭರ್ತಿ ಮಾಡಬೇಕಾಗುತ್ತದೆ.
ಅದರೊಂದಿಗೆ ಹೊಸ ಸದಸ್ಯರ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಬೇಕು. ನಂತರ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ವಿವರಗಳು ಮತ್ತು ದಾಖಲೆಗಳನ್ನು ಭರ್ತಿ ಮಾಡಿದ ನಂತರ, ನೀವು ಫಾರ್ಮ್ ಅನ್ನು ಸಲ್ಲಿಸಬೇಕು. ಫಾರ್ಮ್ ಅನ್ನು ಸಲ್ಲಿಸಿದ ನಂತರ, ನಿಮ್ಮ ನೋಂದಣಿ ಸಂಖ್ಯೆಯನ್ನು ನೀವು ಪಡೆಯುತ್ತೀರಿ. ನೋಂದಣಿ ಸಂಖ್ಯೆಯೊಂದಿಗೆ ನಿಮ್ಮ ವಿನಂತಿಯನ್ನು ನೀವು ಟ್ರ್ಯಾಕ್ ಮಾಡಬಹುದು. ಇದರ ನಂತರ ನಿಮ್ಮ ಫಾರ್ಮ್ ಮತ್ತು ನಿಮ್ಮ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಎಲ್ಲವೂ ಸರಿಯಾಗಿದ್ದರೆ ಹೊಸ ಸದಸ್ಯರ ಹೆಸರನ್ನು ಪಡಿತರ ಚೀಟಿಗೆ ಸೇರಿಸಲಾಗುವುದು. ಹತ್ತಿರದ ಪಡಿತರ ಅಂಗಡಿಗೆ ಹೋಗುವ ಮೂಲಕ ನಿಮ್ಮ ಪಡಿತರ ಚೀಟಿಯಲ್ಲಿ ನಿಮ್ಮ ಹೆಸರನ್ನು ನವೀಕರಿಸಬಹುದು.
ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿ
ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
ಹೊಸ ಪೇಜ್ ನಲ್ಲಿ ಫಾರ್ಮ್ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನಲೋಡ್ ಮಾಡಿ.
ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.
ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.
Ration card thiddupadi status-ರೇಷನ್ ಕಾರ್ಡ್ ತಿದ್ದುಪಡಿಗೆ ಡಿಸೆಂಬರ್ 31ರವರೆಗೆ ಅವಕಾಶ,ರೇಷನ್ ಕಾರ್ಡ್ ನಂಬರ್ ಹಾಕಿ ತಿದ್ದುಪಡಿ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ e-status ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ Amendment requests ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ಪಡಿತರ ಚೀಟಿಯ ಬದಲಾವಣೆ ಕೋರಿಕೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಅಥವಾ Acknowledgment ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ಆಹಾರ ಇಲಾಖೆಗೆ ಸಲ್ಲಿಸಲಾಗಿದೆ ಹಾಗೂ ಆಹಾರ ನೀರಿಕ್ಷರಿಂದ ಪ್ರಕ್ರಿಯೆಗೆ ಕಾಯುತ್ತಿದೆ ಎಂದು ತೋರಿಸಿದರೆ ನಿಮ್ಮ ತಿದ್ದುಪಡಿ ಅರ್ಜಿ ಇನ್ನೂ ಬಾಕಿ ಇದೆ ಎಂದು ಅರ್ಥ
ಈ ಕೆಳಗಿನಂತೆ ತೋರಿಸಿದರೆ ನಿಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಅರ್ಥ
(ಸೂಚನೆ-ಆಹಾರ ವೆಬ್ಲೈಟ್ ಓಪನ್ ಆಗದಿದ್ದರೆ,10 ಗಂಟೆಯ ನಂತರ ಪ್ರಯತ್ನಿಸಿ)
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ - https://krushirushi.in/Tahasildar-varification-status-approved-1634
]]>
ಕಳೆದ ಕೆಲವು ದಿನಗಳ ಹಿಂದೆ ಗೃಹಲಕ್ಷ್ಮಿ ಯೋಜನೆಯ(Gruhalakshmi yojane) ಹಣ 2 ತಿಂಗಳ ಹಿಂದಿನ ಕಂತು ಜಮೆ ಆಗಿತ್ತು. ಆದರೆ ಇತ್ತೀಚಿನ 2 ಕಂತುಗಳ ಹಣ ಇನ್ನು ಜಮೆ ಆಗಿಲ್ಲ ಎಂಬುದು ಯಜಮಾನಿಯರ ಆರೋಪವಾಗಿದೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರು ಇನ್ನೊಂದು ವಾರ ಅಂದರೆ ಮಾರ್ಚ್ 31ರ ಬಳಿಕ 2 ಕಂತುಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ
ಹೌದು ಈ ಕುರಿತು ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ಬಳಿಕ ಅಂದರೆ ಇನ್ನೊಂದು ವಾರ ಬಿಟ್ಟು ಹಾಕಲಾಗುತ್ತದೆ. ಈಗಾಗಲೇ ಹಿಂದಿನ 2 ಕಂತುಗಳ ಹಣ ಖಾತೆಗೆ ಹಾಕಲಾಗಿದೆ. ಇನ್ನು ಉಳಿದ 2 ಕಂತುಗಳ ಹಣವನ್ನು ಮಾರ್ಚ್ 31 ರ ನಂತರ ಅಕೌಂಟಿಗೆ ಹಾಕಲಾಗುತ್ತದೆ ಎಂದು ಅವರು ಸ್ಪಷ್ಟನೆ ನೀಡಿದರು.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ರಸ್ತೆ ಸಂಪರ್ಕ ಒದಗಿಸುವುದು ನಮ್ಮ ಗುರಿಯಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರ ವಿನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಕುರಿತು ವಿಧಾನಸಭೆಯಲ್ಲಿ ಮಾಹಿತಿ ನೀಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
'ನಮ್ಮ ಗ್ರಾಮ, ನಮ್ಮ ಹೊಲ' ಯೋಜನೆ ಸ್ಥಗಿತವಾಗಿರುವುದರಿಂದ ರೈತರು ಹೊಲಕ್ಕೆ ಹೋಗುವ ದಾರಿಗಳಿಗೆ ಅವಕಾಶ ಕಲ್ಪಿಸುವ ನೀತಿಯನ್ನು ಹೊಸ ರೂಪದಲ್ಲಿ ತರುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇನೆ.
ರಸ್ತೆಗಳು ಎಂಬ ಪರಿಕಲ್ಪನೆಯಲ್ಲಿ ಕಾಲುದಾರಿ(Kalu Dari),
ಬಂಡಿ ಜಾಡು(Bandi jadu)ಕೂಡಾ ಒಳಗೊಂಡಿರುತ್ತವೆ' ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಭೂಸ್ವಾಧೀನ ಕಾಯ್ದೆಯಡಿ ಜಮೀಣು ಸ್ವಾಧೀನಪಡಿಸಿಕೊಂಡ ಮಾತ್ರಕ್ಕೆ 'ಬಿ ಖರಾಬ್' ಭೂಮಿಯಲ್ಲಿ ಸಾರ್ವಜನಿಕರ ಹಕ್ಕನ್ನು ರದ್ದುಪಡಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
'ಕರ್ನಾಟಕ ಭೂ ಕಂದಾಯ ಕಾಯ್ದೆ-1964ರ ಕಲಂ 67ರ ಪ್ರಕಾರ ಎಲ್ಲಾ ಸಾರ್ವಜನಿಕ ರಸ್ತೆಗಳು, ಬೀದಿಗಳು, ಓಣಿಗಳು, ಪಥಗಳು, ಸೇತುವೆಗಳು, ಕಂದಕಗಳು, ತಡೆಗೋಡೆಗಳು ಮತ್ತು ಬೇಲಿಗಳು ಸರ್ಕಾರಕ್ಕೆ ಸೇರಿವೆ ಎಂದು ಸೂಚಿಸುತ್ತದೆ. ಕಾಲುದಾರಿ(Klaudari) ಅಥವಾ ಬಂಡಿ ಜಾಡು (Bandi jadu)ಎಂಬ ಗಾಡಿ ಜಾಡು ಈ ಹಿಂದೆ ಕರೆಯಲಾಗುತ್ತಿದ್ದ ರಸ್ತೆಗಳೆನಿಸಿವೆ' ಎಂದು ನ್ಯಾಯಪೀಠ ಹೇಳಿದೆ.
'ಕಾಲುದಾರಿ, ಬಂಡಿ ಜಾಡು ಸ್ಥಳವನ್ನು ಗ್ರಾಮದ ನಕ್ಷೆಯಲ್ಲಿ(Village map) ಮತ್ತು ಸಂಬಂಧಿತ ಕಂದಾಯ ದಾಖಲೆಗಳಲ್ಲಿ ಗುರುತಿಸಲಾಗಿದೆ. ಭೂಮಾಲೀಕರಿಗೆ ಸಂಬಂಧಿಸಿದಂತೆ ಈ ಭಾಗವನ್ನು 'ಬಿ ಖರಾಬ್' ಎಂದು ವರ್ಗೀಕರಿಸಲಾಗಿದೆ. ಈ ಜಮೀನುಗಳು ಸರ್ಕಾರಕ್ಕೆ ಸೇರಿದ್ದರೂ, ಸಾರ್ವಜನಿಕರ ಹಕ್ಕನ್ನೂ ನೀಡಲಾಗಿರುತ್ತದೆ' ಎಂದು ನ್ಯಾಯಪೀಠ ತಿಳಿಸಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆಯ ಕಲಂ 68ರ ಪ್ರಕಾರ 'ಬಿ
ಖರಾಬ್'ನಲ್ಲಿ ಸಾರ್ವಜನಿಕರ ಹಕ್ಕನ್ನು ಕಸಿದುಕೊಳ್ಳಲಾಗಿಲ್ಲ. ಈ ಸ್ಥಳದ ಮತ್ತು ಸುತ್ತಮುತ್ತಲಿನ ಎಲ್ಲಾ ಗ್ರಾಮಸ್ಥರು ಅಥವಾ ಸಾರ್ವಜನಿಕರು ಕಾಲುದಾರಿ ಬಳಸಲು ಅರ್ಹರಾಗಿರುತ್ತಾರೆ. ಹಾಗಾಗಿ, ಅರ್ಜಿದಾರರು ಈ ಭೂಮಿಯನ್ನು ಮೀಸಲಿಡಬೇಕಾಗಿತ್ತು ಮತ್ತು ಅದನ್ನು ಮಾರುಕಟ್ಟೆ ಪ್ರಾಂಗಣದ ಉದ್ದೇಶಗಳಿಗಾಗಿ ಬಳಸಬಾರದು' ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.
ರೈತರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯಿಲ್ಲದೆ ಸಾಕಷ್ಟು ಕಷ್ಟ ಪಡುತ್ತಿರುತ್ತಾರೆ. ಜಮೀನು ಹತ್ತಿರವೇ ಇರುತ್ತದೆ. ಆದರೆ ಎತ್ತಿನ ಬಂಡಿ ಹೋಗುವ ದಾರಿಯಿಲ್ಲದೆ ಬಹಳಷ್ಟು ತೊಂದರೆ ಅನುಭವಿಸುತ್ತಿರುತ್ತಾರೆ. ಅದಲ್ಲದೆ ಆದರೆ ಕೆಲವರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯೇ ಇಲ್ಲ.
ಅಕ್ಕಪಕ್ಕದ ಜಮೀನುಗಳಿಗೆ ದಾರಿ ಮಾಡಿಕೊಡದೆ ತೊಂದರೆ ಕೊಡುತ್ತಾರೆ.ಆದರೆ ಸರ್ಕಾರ ಈ ಕುರಿತು ಹೊಸ ನಿಯಮಾವಳಿಗಳನ್ನು ಹೊರಡಿಸಿದೆ. ನೀವು ಭೂಮಿಯನ್ನು ಹೊಂದಿರುವಾಗ ಜಮೀನಿನಲ್ಲಿ ಕೃಷಿ ಕಾರ್ಯಾಚರಣೆಗಳು ಎಷ್ಟು ಮುಖ್ಯವೋ, ಕ್ಷೇತ್ರಕ್ಕೆ ಪ್ರವೇಶವನ್ನು ಖಚಿತಪಡಿಸಿಕೊಳ್ಳುವುದು ಅಷ್ಟೇ ಮುಖ್ಯ.
ರೈತರು ತಮ್ಮ ಕೃಷಿ ಪರಿಕರಗಳನ್ನು ಜಮೀನಿಗೆ ಒಯ್ಯಬೇಕು. ಆದರೆ ಸರಿಯಾದ ದಾರಿ ಇಲ್ಲದಿದ್ದರೆ ಸಾಧ್ಯವಿಲ್ಲ. ಅಕ್ಕಪಕ್ಕದ ರೈತರನ್ನು ದಾರಿ ಕೇಳಿದರೆ ಅವರು ನಿರಾಕರಿಸುತ್ತಾರೆ. ತೊಂದರೆ ಕೊಡಲು ಪ್ರಯತ್ನಿಸುತ್ತಾರೆ. ಇಂತಹ ಸಮಯದಲ್ಲಿ ನೀವು ಕಾನೂನಿನ ಆಶ್ರಯವನ್ನು ತೆಗೆದುಕೊಳ್ಳಬಹುದು. ಈ ಕಾಯಿದೆಯ ಮೂಲಕ ನಿಮ್ಮ ಭೂಮಿಗೆ ಪ್ರವೇಶವನ್ನು ಮಾಡಬಹುದು. ಜಮೀನಿನ ದಾರಿಯ ಬಗ್ಗೆ ಕಾನೂನು ವ್ಯವಸ್ಥೆಯಲ್ಲಿ ಕಾನೂನುಗಳಿವೆ.
ಸರಾಗಗೊಳಿಸುವ ಕಾಯಿದೆಯು ಅವಶ್ಯಕತೆಯ ಸುಲಭತೆಯನ್ನು ಸೂಚಿಸುತ್ತದೆ. ಕಾನೂನಿನ ನಿಯಮದ ಪ್ರಕಾರ.. ಯಾವುದೇ ಕ್ಷೇತ್ರವು ಮತ್ತೊಂದು ಕ್ಷೇತ್ರದ ಮುಂದೆ ಇರುವಾಗ ಹಿಂಬದಿ ಕ್ಷೇತ್ರಕ್ಕೆ ಬಿಟ್ಟುಕೊಡಬೇಕು ಇಲ್ಲದಿದ್ದರೆ ಪ್ರಕರಣ ದಾಖಲಿಸಬಹುದು. ಸರಾಗ ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕಾದ ಇನ್ನೊಂದು ಮುಖ್ಯ ವಿಷಯವೆಂದರೆ ಈ ಹಿಂದೆ ಆ ಜಮೀನಿಗೆ ರಸ್ತೆ ಇದ್ದು, ಈಗ ಅದು ಮುಚ್ಚಿದ್ದರೆ ನೀವು ಅದರ ಬಗ್ಗೆ ಕೇಸ್ ದಾಖಲಿಸಬಹುದು. ಬೇರೆ ಜಮೀನಿಗೆ ಹೋಗಬೇಕಾದರೆ ದಾರಿ ಬಿಡಬೇಕು. ಇಲ್ಲದಿದ್ದರೆ ನೊಂದ ರೈತರು ಪ್ರಕರಣ ದಾಖಲಿಸಬಹುದು. ಟೆನೆನ್ಸಿ ಆಕ್ಟ್ನ ಸೆಕ್ಷನ್ 251 ನಿಮ್ಮ ಫಾರ್ಮ್ಗೆ ಹೋಗುವ ಹೊಸ ರಸ್ತೆಯನ್ನು ನಿರ್ಮಿಸಲು ನಿಮಗೆ ಅನುಮತಿಸುತ್ತದೆ.
Village map-ನಿಮ್ಮ ಊರಿನ ಕಾಲುದಾರಿ,ಬಂಡಿದಾರಿ ತಿಳಿಯುವ ಡೈರೆಕ್ಟ್ ಲಿಂಕ್
https://landrecords.karnataka.gov.in/indexkn.aspx
ನಂತರ ಕಂದಾಯ ನಕ್ಷೆಗಳು ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೋಬಳಿ,ಗ್ರಾಮ select ಮಾಡಿ, search ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ ಗ್ರಾಮದ ಹೆಸರು ಕಾಣೆಸುತ್ತದೆ. ಆಗ ನಿಮ್ಮ ಗ್ರಾಮದ ಮುಂದಿರುವ pdf file ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದ ನಕ್ಷೆ ಕಾಣೆಸುತ್ತದೆ. ಅದರಲ್ಲಿ ಕಾಲುದಾರಿ,ಬಂಡಿದಾರಿ,ಕೆರೆ ಕಟ್ಟೆಯನ್ನು ನೋಡಬಹುದು.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಯೋಜನೆಗಳ ಪಟ್ಟಿ ದೊರೆಯಲಿದೆ, ಅದರಲ್ಲಿ ನಿಮಗೆ ಬೇಕಾದ ಯೋಜನೆಯ ಮೇಲೆ ಕ್ಲಿಕ್ ಮಾಡಿ
ಉದಾಹರಣೆಗೆ ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿ(Gruhalakahmi)
ಈ ಕೆಳಗಿನಂತೆ ಇಲ್ಲಿಯವರೆಗೂ ಹಣ ಜಮಾ ಆಗಿರುವ ಮಾಹಿತಿ ತೋರಿಸುತ್ತದೆ.
ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ(Farmer) ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ 5 ಲಕ್ಷವರೆಗೆ ಬಡ್ಡಿ ರಹಿತ ಸಾಲ(Without interest loan)ಸೌಲಭ್ಯ ನೀಡಲಿದೆ.
ಹೌದು, ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಹವಾಮಾನ ವೈಪರೀತ್ಯ, ಅನಿಶ್ಚಿತ ಫಸಲು ಹಾಗೂ ರೋಗರುಜಿನಗಳಿಂದ ತತ್ತರಿಸಿಹೋಗಿರುವ ಕೃಷಿ ಕ್ಷೇತ್ರದಲ್ಲಿ ಮತ್ತೆ ಉತ್ಸಾಹವನ್ನು ಕಾಣಲು ನಮ್ಮ ಸರ್ಕಾರ ಟೊಂಕ ಕಟ್ಟಿ ನಿಂತಿದೆ.
ಅನ್ನದಾತರ ಕೈಗಳಿಗೆ ಹಣ ನೀಡಿ ಅದನ್ನು ಕೃಷಿಯಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸಿ, ಆ ಮೂಲಕ ನಾಡಿನ ಆರ್ಥಿಕತೆಗೆ ಬಲತುಂಬುವುದು ನಮ್ಮ ಸರ್ಕಾರದ ಆಶಯ ಎಂದು ಹೇಳಿದ್ದಾರೆ.
5 ಲಕ್ಷ ರೂ.ಗಳವರೆಗೆ ಶೂನ್ಯ ಬಡ್ಡಿ (Zero interest loan)ರೂಪದಲ್ಲಿ ನೀಡಲಾಗುವ ಸಾಲವನ್ನು ಸಹಕಾರಿ ಕೃಷಿ ಬ್ಯಾಂಕ್ (Primary cooperative society)ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ಗಳಿಗೆ ವಿಸ್ತರಿಸಲಾಗಿದೆ. ಇದಕ್ಕಾಗಿ ಹೆಚ್ಚುವರಿಯಾಗಿ 38 ಕೋಟಿ ರೂ. ಮೀಸಲಿರಿಸಲಾಗಿದೆ.ರೈತರ ಕಾಳಜಿ ಎನ್ನುವುದು ನಮ್ಮ ಭಾಷಣದ ಸರಕಲ್ಲ, ಆಡಳಿತದ ಕೇಂದ್ರಬಿಂದು ಎಂಬುದನ್ನು ಮತ್ತೆ ಸಾಬೀತು ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಿಮ್ಮ ಸರ್ವೆ ನಂಬರ್ ಮೇಲೆ ಎಷ್ಟು ಸಾಲ ಇದೆ? ಇನ್ನೂ ಎಷ್ಟು ಸಾಲ ಸಿಗಲಿದೆ ಚೆಕ್ ಮಾಡಿ
ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು
https://landrecords.karnataka.gov.in/Service2/
ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ.
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಇದನ್ನೂ ಓದಿ
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427
ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್(Survey number) ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ(Survey number) ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ(crop loan) ಪಡೆಯಲಾಗಿದೆ. ಎಂಬ ಮಾಹಿತಿ ಇರುತ್ತದೆ.ಕಿಸಾನ್ ಕ್ರೆಡಿಟ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಪಡೆಯಲು ಅವಕಾಶ ಇರುವುದರಿಂದ,ಸಾಲದ ವಿವರ ನೊಡಿಕೊಂಡು ಉಳಿದ ಸಾಲ ಪಡೆಯಬಹುದು.
ಇದನ್ನೂ ಓದಿ
Waqf board property-ಸರ್ವೆ ನಂಬರ್ ಹಾಕಿ ನಿಮ್ಮ ಪಹಣೆ ನಿಮ್ಮ ಹೆಸರಿನಲ್ಲಿದೆಯೊ ಅಥವಾ ಬೇರೆಯವರ ಹೆಸರಿನಲ್ಲಿದೆಯೊ ಚೆಕ್ ಮಾಡಿಕೊಳ್ಳಿ - https://krushirushi.in/Waqf-board-property-1672
ಗಳೂರು: ಬಿರುಬಿಸಿಲಿನ ನಡುವೆ ರಾಜ್ಯದ ಹಲವೆಡೆ ಶುಕ್ರವಾರ ಗುಡುಗು ಸಹಿತ ಮಳೆಯಾಗಿದ್ದು, ಮಾ.22ರಂದು ಕೂಡ ಮಳೆಯಾಗುವ (Weather Forecast) ಮುನ್ಸೂಚನೆ ಸಿಕ್ಕಿದೆ. ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಕೊಡಗು, ವಿಜಯನಗರ, ಹಾಸನ, ವಿಜಯನಗರ, ಹಾಸನ, ವಿಜಯನಗರ, ಹಾಸನ ಜಿಲ್ಲೆಗಳಲ್ಲಿ ಶನಿವಾರ ಗುಡುಗು ಸಹಿತ ಮಳೆಯಾಗುವ (Heavy Rain) ಸಂಭವವಿದೆ.
ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳು, ಕರ್ನಾಟಕದ ಒಳಗಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ: ಮೋಡ ಕವಿದ ಆಕಾಶ ಇರಲಿದ್ದು, ರಾತ್ರಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 °C ಮತ್ತು 21°C ಆಗಿರಬಹುದು.
ಮಾ.27ರವರೆಗೆ ರಾಜ್ಯದಲ್ಲಿ ಗುಡುಗು ಸಹಿತ ಮಳೆ
ಮಾ.23ರಂದು ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಕೊಡಗು, ಚಿಕ್ಕಮಗಳೂರು, ಹಾಸನ, ಚಿಕ್ಕಮಗಳೂರು, ಚಿಕ್ಕಮಗಳೂರು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಮಂಡ್ಯ ಮತ್ತು ಮೈಸೂರು ಜಿಲ್ಲೆಗಳು, ಕರ್ನಾಟಕದ ಒಳಗಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಮಾ.24ರಂದು ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳಗಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಮಾ.25ರಂದು ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳಗಿನ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಮಾ.26ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಮಾ.27ರಂದು ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಹೆಚ್ಚಾಗಿರಲಿದೆ.
]]>
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ(Pradan mantri kisan samman yojane)
ಅಡಿ ಅರ್ಹ ಎಲ್ಲ ರೈತರಿಗೆ ಸೌಲಭ್ಯ ನೀಡಲು ಕೇಂದ್ರ ಸರ್ಕಾರ ಸಿದ್ದವಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಹೇಳಿದರು.
ಲೋಕಸಭೆಯಲ್ಲಿ ಮಂಗಳವಾರ ಪ್ರಶೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಭೂ ರಹಿತರಿಗೆ ಈ ಸೌಲಭ್ಯ ನೀಡುವುದಿಲ್ಲ. ಆದರೆ, ತುಂಡು ಕೃಷಿ ಭೂಮಿಯನ್ನಾದರೂ ಹೊಂದಿರಬೇಕು ಎಂದು ವಿವರಿಸಿದರು.
'ಈ ಯೋಜನೆಯಡಿ ಕೇಂದ್ರ ಸರ್ಕಾರವು ಈವರೆಗೆ 19 ಕಂತುಗಳಲ್ಲಿ ₹3.68 ಲಕ್ಷ ಕೋಟಿ ಮೊತ್ತವನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದೆ' ಎಂದರು.
ಯೋಜನೆಯ ಭಾಗವಾಗಿಲ್ಲದ ಎಲ್ಲ ಅರ್ಹ ರೈತರಿಗೆ ವಾರ್ಷಿಕ ₹6,000 ನಗದು ಪ್ರಯೋಜನ ನೀಡಲು ಸರ್ಕಾರ ಸಿದ್ಧವಾಗಿದೆ. ಅಂತಹ ರೈತರಿಗೆ ಹಿಂದಿನ ಕಂತುಗಳನ್ನು ನೀಡಲು ಸಿದ್ಧರಿದ್ದೇವೆ. ಅಂತಹ ರೈತರನ್ನು ಗುರುತಿಸಿ ಯೋಜನೆಯಲ್ಲಿ ಸೇರಿಸಲು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಅವರು ಕೋರಿದರು.
ಪಿಎಂ ಕಿಸಾನ್(kisan samman) ಅರ್ಹತೆಯ ಮಾನದಂಡಗಳೇನು?
ಎಲ್ಲ ಅರ್ಹ ಫಲಾನುಭವಿಗಳು ಕನಿಷ್ಠ ಪ್ರಮಾಣದ ಭೂಮಿ ಹೊಂದಿರಬೇಕು. ಇ-ಕೆವೈಸಿ ಮಾಡಿಸಿಕೊಳ್ಳಬೇಕು ಮತ್ತು ಪಿಎಂ-ಕಿಸಾನ್ ಪೋರ್ಟಲ್ನಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು.
ನಿಧಿಯನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಗಾಯಿಸಲಾಗುತ್ತದೆ ಎಂದು ಅವರು ಹೇಳಿದರು.
ಇಲ್ಲಿಯವರೆಗೂ 19 ಕಂತುಗಳಲ್ಲಿ 3.68 ಲಕ್ಷ ಕೋಟಿ ಪಿಎಂ ಕಿಸಾನ್ ಹಣ ರೈತರ ಖಾತೆಗೆ
ಇದುವರೆಗೆ 3.68 ಲಕ್ಷ ಕೋಟಿ ರೂಪಾಯಿಗಳನ್ನು 19 ಕಂತುಗಳಲ್ಲಿ ದೇಶದಾದ್ಯಂತದ ರೈತರಿಗೆ ವಿತರಿಸಲಾಗಿದೆ
ನಿಮಗೇಷ್ಟು ಜಮಾ ಹೀಗೆ ಚೆಕ್ ಮಾಡಿ-Pmkisan beneficiary status
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಮೊದಲು know your status ಮೇಲೆ ಕ್ಲಿಕ್ ಮಾಡಿ
ನಂತರ know your register number ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ
ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.
ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ
ನಂತರ update your details ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ
Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.
ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ
Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.
FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ ಕಾರಣ ಮತ್ತು ಪರಿಹಾರ
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
fruitspmk.gov.in ಪೋರ್ಟಲ್ ನಲ್ಲಿ |
|||
1 |
ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ |
ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು |
ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ (NIC) ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ. ಆ) ಸಮಸ್ಯಾತ್ಮಕ ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ. |
2 |
ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು |
ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ |
ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ |
3 |
ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು |
ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ |
ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ |
4 |
ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ |
ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ |
OPERATOR ಲಾಗಿನ್ (RSK, ADA office, JDA office) OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು |
5 |
01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ |
ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ |
ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ) |
6 |
Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು |
ಜಿಲ್ಲೆಗಳಲ್ಲಿ OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ |
AAO ಲಾಗಿನ್ (RSK, ADA office, JDA office) AAO ಲಾಗಿನ್ನಲ್ಲಿ ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ, ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
7 |
ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ |
ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ) |
AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ. |
8 |
PFMS rejected |
Aadhaar Number is not seeded in NPCI |
ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ |
Bank Name And IFSC Code are not related to each other |
ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ |
||
Bank Name is not as per PFMS Bank Master. |
|||
Beneficiary is rejected as Account Type is other than SB / SBA / JD |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ) |
||
Duplicate Beneficiary Name , Bank Account No and Bank Name not allowed for same scheme |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
IFSC Code either not present or currently inactive in tbl BankBranch |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
Incorrect Aadhaar Number |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
One or more mandatory tags values are missing. |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
||
Rejected by Bank, Account No does not exist in Bank/INVALID/CLOSED |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
9 |
Amount credited to Account Number-NA |
Aadhaar number based payment by GoI |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ. |
10 |
PAYMENT STOPPED BY STATE |
XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ |
ಕೇಂದ್ರ ಸರ್ಕಾರ |
11 |
Transaction failed |
ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ. |
12 |
ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ |
OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ |
ಕೇಂದ್ರ ಸರ್ಕಾರ |
13 |
ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು |
ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ. |
ಕೇಂದ್ರ ಸರ್ಕಾರ ದ pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ. |
ರೈತರ ಆದಾಯವನ್ನು ಹೆಚ್ಚಿಸಲು ಮತ್ತು ತೋಟಗಾರಿಕಾ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಸರ್ಕಾರವು ರಾಷ್ಟ್ರೀಯ ತೋಟಗಾರಿಕೆ ಮಂಡಳಿ (NHB) ಮೂಲಕ ಹಲವಾರು ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ರೈತರು ಶೇಡ್ ನೆಟ್(Shade net), ಹಸಿರು ಮನೆ(green house), ಪಾಲಿಹೌಸ್ ಕೃಷಿ(Poly house), ಶೀತಲೀಕರಣ ಘಟಕ(cold storage) ಮತ್ತು ಅಣಬೆ ಕೃಷಿ(Mushroom cultivation)ಸ್ಥಾಪನೆಗೆ ಶೇಕಡಾ 50 ರವರೆಗೆ ಸಬ್ಸಿಡಿ ಪಡೆಯಬಹುದು.
ಯಾವೆಲ್ಲಾ ಸೌಲಭ್ಯಗಳು ಲಭ್ಯವಿದೆ ?
ಶೇಡ್ ನೆಟ್(Shade net), ಹಸಿರು ಮನೆ(Green House) ಮತ್ತು ಪಾಲಿಹೌಸ್ ಕೃಷಿ(Poly House): ಈ ರೀತಿಯ ಕೃಷಿಗೆ ಸರ್ಕಾರವು ಶೇಕಡಾ 50 ರವರೆಗೆ ಸಬ್ಸಿಡಿ ನೀಡುತ್ತಿದೆ.
ತೆರೆದ ಜಮೀನಿನಲ್ಲಿ ಹಣ್ಣಿನ ಕೃಷಿ: ನೆಲ್ಲಿಕಾಯಿ, ಮಾವು, ಪೇರಲದಂತಹ ಹಣ್ಣುಗಳನ್ನು ಬೆಳೆಯುವ ರೈತರಿಗೆ ಶೇಕಡಾ 40 ರವರೆಗೆ ಸಬ್ಸಿಡಿ ನೀಡಲಾಗುತ್ತಿದೆ.
ಶೀತಲೀಕರಣ ಘಟಕ ಮತ್ತು ಅಣಬೆ ಕೃಷಿ: ಶೀತಲೀಕರಣ ಘಟಕ ಸ್ಥಾಪನೆಗೆ ಶೇಕಡಾ 30 ರಿಂದ 50 ರವರೆಗೆ ಮತ್ತು ಅಣಬೆ ಕೃಷಿಗೆ ಶೇಕಡಾ 40 ರವರೆಗೆ ಸಬ್ಸಿಡಿ ನೀಡಲಾಗುತ್ತಿದೆ.
ಕೃಷಿ ಸಂಬಂಧಿತ ಉದ್ಯಮಿಗಳು, ಸ್ಟಾರ್ಟ್ಅಪ್ಗಳು ಮತ್ತು ರೈತರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ.
ಹಣ್ಣು ಮತ್ತು ಹೂವುಗಳ ಕೃಷಿಯ ಜೊತೆಗೆ ಸಂಬಾರ ಪದಾರ್ಥಗಳು, ಆರೊಮ್ಯಾಟಿಕ್ ಮತ್ತು ಔಷಧೀಯ ಸಸ್ಯಗಳ ಕೃಷಿಗೂ ಸಬ್ಸಿಡಿ ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸುವುದು ಹೇಗೆ ?
ರೈತರು ರಾಷ್ಟ್ರೀಯ ತೋಟಗಾರಿಕೆ ಮಂಡಳಿಯ ಅಧಿಕೃತ ವೆಬ್ಸೈಟ್ www.nhb.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಯೋಜನೆಯ ವೆಚ್ಚಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಬೇಕಾಗುವ ದಾಖಲೆಗಳು
ಪ್ಯಾನ್ ಕಾರ್ಡ್
ಮತದಾರರ ಗುರುತಿನ ಚೀಟಿ
ಆಧಾರ್ ಕಾರ್ಡ್
ಪಾಲುದಾರಿಕೆ ಸಂಸ್ಥೆಯ ನೋಂದಣಿ (ಅನ್ವಯಿಸಿದರೆ)
ಕಂಪನಿ, ಸೊಸೈಟಿ, ಟ್ರಸ್ಟ್ ಇತ್ಯಾದಿಗಳ ನೋಂದಣಿ (ಅನ್ವಯಿಸಿದರೆ)
ಹೆಚ್ಚಿನ ಮಾಹಿತಿ:
ಹೆಚ್ಚಿನ ಮಾಹಿತಿಗಾಗಿ, ನಿಮ್ಮ ಹತ್ತಿರದ ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಿ.
ಅಥವಾ, ರಾಷ್ಟ್ರೀಯ ತೋಟಗಾರಿಕೆ ಮಂಡಳಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
ಈ ಯೋಜನೆಯು ರೈತರಿಗೆ ತೋಟಗಾರಿಕೆ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಮತ್ತು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ.
ಟ್ರ್ಯಾಕ್ಟರ್ ಸೇರಿದಂತೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Tractor subsidy scheme 2025
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಕೃಷಿಹೊಂಡ, ಪ್ಯಾಕ್ಹೌಸ್, ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ
https://horticulturedir.karnataka.gov.in/info-2/Facilities+available+to+farmers/kn
ವಿವಿಧ ಯೋಜನೆಗಳು:
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ:
ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೆÇೀಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:
ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಯಾಕ್ಹೌಸ್ ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ:
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.75 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.
ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ:
ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಮತ್ತು ಬೈಯೋಡೈಜಿಸ್ಟರ್ ಮತ್ತು ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಸಹ ಅರ್ಜಿ ಆಹ್ವಾನಿಸಲಾಗಿದೆ.
ಮೇಲ್ಕಂಡ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಲಾಗಿದೆ. ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.
]]>ರಾಜ್ಯದ ಜನತೆಗೆ ಸಂತಸದ ಸುದ್ದಿ. 2025-26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಸಹಕಾರ ಇಲಾಖೆ ಮಾರ್ಚ 31ರವರೆಗೆ ಅವಕಾಶ ಕಲ್ಪಿಸಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರಿಗೆ ಉಚಿತ ಸದಸ್ಯತ್ವ
ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರು ಉಚಿತವಾಗಿ ಸದಸ್ಯತ್ವ ಪಡೆಯಬಹುದು. ಈ ಯೋಜನೆ ಅಡಿ 1650 ವಿವಿಧ ಚಿಕಿತ್ಸೆಗಳು, 478 ಐಸಿಯು ಚಿಕಿತ್ಸೆಗಳು ಸೇರಿ ಒಟ್ಟು 2,128 ಚಿಕಿತ್ಸೆಗಳಿಗೆ ನಗದುರಹಿತ ಸೌಲಭ್ಯ ದೊರಕಲಿದೆ.
2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಹೊಸ ಸದಸ್ಯರ ನೋಂದಣಿಗೆ ಅವಕಾಶ ನೀಡಲಾಗಿದೆ.
ದಿನಾಂಕ 1/1/2024 ರಿಂದ ಯಶಸ್ವಿನಿ ನೊಂದಣೆ ಆರಂಭಗೊಂಡಿದ್ದು ದಿನಾಂಕ 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ.
ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತರ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ. 100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.
ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬAಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.
ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ನೆಟ್ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್ಡಿ ನಂಬರ್ ತರುವುದು ಕಡ್ಡಾಯವಾಗಿದೆ.
ಎ) ಪ್ರಸ್ತುತ ಯಶಸ್ಸಿನಿ ಯೋಜನೆಯಡಿಯಲ್ಲಿ ಟ್ರಸ್ಟ್ ಗುರ್ತಿಸಿದ 1650 ವಿವಿಧ ಚಿಕಿತ್ಸೆಗಳು ಮತ್ತು 478 ICU ಚಿಕಿತ್ಸೆಗಳೂ ಸೇರಿದಂತೆ ಒಟ್ಟು 2128 ಚಿಕಿತ್ಸೆಗಳನ್ನು ಅಳವಡಿಸಿಕೊಳ್ಳಲಾಗಿದೆ.
ಬಿ) ರೋಗಿಗಳಿಗೆ ಸದರಿ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದಲ್ಲಿ ನೋಂದಾಯಿಸಿದ ಯಶಸ್ಸಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಒದಗಿಸಲಾಗುವುದು. ನೆಟ್ವರ್ಕ್ ಆಸ್ಪತ್ರೆಗಳನ್ನು ಹೊರತುವಡಿಸಿ ಇತರೆ ಆಸ್ಪತ್ರೆಗಳಲ್ಲಿ ಯಶಸ್ವಿನಿ ಯೋಜನೆಯ ಸೇವೆ ಲಭ್ಯವಿರುವುದಿಲ್ಲ. ಯಶಸ್ಸಿನಿ ಯೋಜನೆಯಡಿ ಫಲಾನುಭವಿ ಚಿಕಿತ್ಸೆ ಪಡೆಯುವ ಮೊದಲು ಆಸ್ಪತ್ರೆಯು ಯೋಜನೆಗೆ ಒಳಪಟ್ಟಿರುವ ಬಗ್ಗೆ, ಖಾತ್ರಿ ಪಡಿಸಿಕೊಂಡು ನಂತರ ಚಿಕಿತ್ಸೆ ಪಡೆಯತಕ್ಕದ್ದು.
ಸಿ) ಯೋಜನೆಯಲ್ಲಿ ಒಳವಡದ ಚಿಕಿತ್ಸೆಗಳ ಮತ್ತು ಟ್ರಸ್ಟ್ ಅಂಗೀಕರಿಸದ ಆಸ್ಪತ್ರೆಗಳಲ್ಲಿ ಪಡೆದಂತಹ ಚಿಕಿತ್ಸೆಗಳಿಗೆ ಯಶಸ್ವಿನಿ ಟ್ರಸ್ಟ್ ಜವಾಬ್ದಾರರಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಆಸ್ಪತ್ರೆಗಳಿಗಾಗಲಿ ಅಥವಾ ಫಲಾನುಭವಿಗಳಿಗಾಗಲಿ ಚಿಕಿತ್ಸಾ ವೆಚ್ಚವನ್ನು ಪಾವತಿಸಲಾಗುವುದಿಲ್ಲ.
ಡಿ) ಎರಡು ಜೀವಂತ ಮಕ್ಕಳು ಅಥವಾ ಎರಡು ಹೆರಿಗೆಗೆ ಮಾತ್ರ ಯಶಸ್ವಿನಿ ಯೋಜನೆಯಲ್ಲಿ ಸೌಲಭ್ಯ ದೊರೆಯುತ್ತದೆ.
ಇ) ಯಶಸ್ವಿನಿ ಯೋಜನೆಯ ಪ್ರೋಟೋಕಾಲ್ ಪ್ರಕಾರ ಯಶಸ್ವಿನಿ ಫಲಾನುಭವಿಗಳು ಜನರಲ್ ವಾರ್ಡನಲ್ಲಿ ಮಾತ್ರ ಚಿಕಿತ್ಸೆ ವಡೆಯಲು ಅರ್ಹರಿರುತ್ತಾರೆ. ಒಂದು ವೇಳೆ ಯೋಜನೆಯಡಿ ನಿಗದಿಪಡಿಸಿರುವ ಜನರಲ್ ವಾರ್ಡ್ ಬದಲಾಗಿ ಉನ್ನತ(Semi Special Ward Or Special Ward)ನಲ್ಲಿ ಚಿಕಿತ್ಸೆ ಪಡೆಯಲು ಇಚ್ಚಿಸಿದಲ್ಲಿ ಸದರಿ ಫಲಾನುಭವಿಗಳಿಗೆ ಯೋಜನೆಯಡಿ ನಿಗದಿ ಪಡಿಸಿರುವಂತೆ ಜನರಲ್ ವಾರ್ಡಗೆ ಅನ್ವಯಿಸುವ ಚಿಕಿತ್ಸೆಯ ವೆಚ್ಚವನ್ನು ಮಾತ್ರ ಭರಿಸಲಾಗುವುದು. ಉನ್ನತ ವಾರ್ಡ್/ಸ್ಪೆಷಲ್ ವಾರ್ಡಿಗೆ ಆಗುವ ಹೆಚ್ಚುವರಿ ವ್ಯತ್ಯಾಸದ ಚಿಕಿತ್ಸಾ ಮೊತ್ತವನ್ನುಸದರಿ ಫಲಾನುಭವಿಗಳೇ ಭರಿಸತಕ್ಕದ್ದು.
ಎಫ್) ಯಶಸ್ವಿನಿ ಯೋಜನೆಯ ವ್ಯಾಕೇಜಿನಲ್ಲಿ Implants ಅಗತ್ಯವಿರುವ ಕಡೆ Implants ơ. (Ex. Knee replacement, Lens in cataract Surgery) ವೇಳೆ ಫಲಾನುಭವಿಗಳು ಉನ್ನತ Implants ಅಥವಾ Lens ನಡೆಯಲು ಸ್ವ ಇಚ್ಛೆಯಿಂದ ಒಪ್ಪಿಗೆ ಸೂಚಿಸಿದ್ದಲ್ಲಿ, ಅಂತಹ ಉನ್ನತ Implants ಮತ್ತು Lens ಗೆ ತಗಲುವ ವ್ಯತ್ಯಾಸದ ಹೆಚ್ಚುವರಿ ಮೊತ್ತವನ್ನು ಅಂತ ಫಲಾನುಭವಿಗಳೇ ಭರಿಸಿ ಚಿಕಿತ್ಸೆಯನ್ನು ವಡೆಯತಕ್ಕದ್ದು.
ಜಿ) ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಯಶಸ್ಸಿನಿ ಸದಸ್ಯರಿಗೆ ಹೊರ ರೋಗಿ ಚಿಕಿತ್ಸೆಗೆ (OPD) ಗರಿಷ್ಠ ರೂ.200/-ಗಳನ್ನು (ಮೂರು ತಿಂಗಳ ಅವಧಿಗೆ) ಮಿತಿ ನಿಗಧಿಪಡಿಸಿದ್ದು, ಈ ಪೈಕಿ ರೂ.100/- ಗಳನ್ನು ಯಶಸ್ವಿನಿ ಟ್ರಸ್ಟ್ ವತಿಯಿಂದ ವಾವತಿಸಲಾಗುವುದು.
17. ಸದಸ್ಯರ ನೋಂದಣಿಗೆ ಮಾರ್ಗಸೂಚಿಗಳು, ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳ ಯಾದಿ, ಶಸ್ತ್ರಚಿಕಿತ್ಸೆಗಳ ಯಾದಿ ಇವುಗಳನ್ನು ಸಹಕಾರ ಇಲಾಖೆಯ ಸಹಕಾರ ಸಿಂಧು ವೆಬ್ಸೈಟ್ನಲ್ಲಿ/ಟ್ರಸ್ಟ ವೆಬ್ಸೈಟ್ನಲ್ಲೂ ಅಪ್ಲೋಡ್ ಮಾಡಲಾಗುವುದು.
18. ಸದಸ್ಯರು ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಒದಗಿಸತಕ್ಕದು.
]]>
ನಕಲಿ ದಾಖಲೆ ನೀಡಿ ಪಡಿತರ ಚೀಟಿ ಪಡೆದುಕೊಂಡ ಅನರ್ಹರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಬರೋಬ್ಬರಿ 21,980 ಪಡಿತರ ಕಾರ್ಡ್ ಗಳನ್ನು ರದ್ದು ಪಡಿಸಿದೆ.
ಹೌದು, ಆದಾಯ ತೆರಿಗೆ ಕಟ್ಟುವ ಹಾಗೂ ಸರ್ಕಾರಿ ನೌಕರಿ ಹೊಂದಿರುವ ಕುಟುಂಬದವರು ಬಿಪಿಎಲ್ ಕಾರ್ಡನ್ನು ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿರುವ ಕಾರ್ಡಗಳನ್ನು ಪತ್ತೆ ಹಚ್ಚುವ ಮೂಲಕ 21,980 ಪಡಿತರ ಚೀಟಿಗಳನ್ನು ರದ್ದುಪಡಿಸಿದೆ.
ಬೆಳಗಾವಿಯಲ್ಲಿ 1482, ಬೀದರ 814, ಹಾಸನ 1030, ಬಾಗಲಕೋಟೆಯಲ್ಲಿ 995, ಬಳ್ಳಾರಿಯಲ್ಲಿ 256, ಬೆಂಗಳೂರು ಈಸ್ಟ್ 531, ಹಾವೇರಿ 333, ಕಲಬುರಗಿ 1497, ಮೈಸೂರು 2441, ತುಮಕೂರು 1044, ಕೊಪ್ಪಳ 506, ಮಂಡ್ಯ 1168, ವಿಜಯನಗರ 204, ವಿಜಯಪುರ 654, ಯಾದಗಿರಿ 139 ಸೇರಿದಂತೆ ಒಟ್ಟು 35 ಜಿಲ್ಲೆಗಳಲ್ಲಿ 21,980 ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.
ರದ್ದಾದ ಪಟ್ಟಿಯಲ್ಲಿರುವವರಿಗಿಲ್ಲ ಅನ್ನಭಾಗ್ಯ ಗೃಹಲಕ್ಷ್ಮಿ ಹಣ
ರದ್ದಾದ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ e-Ration Card ಮೇಲೆ ಕ್ಲಿಕ್ ಮಾಡಿ
ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ ಮೇಲೆ ಕ್ಲಿಕ್ ಮಾಡಿ,Go ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ರದ್ದಾದ ರೇಷನ್ ಕಾರ್ಡ್ ಪಟ್ಟಿ ದೊರೆಯಲಿದೆ
]]>
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ಗೆ 8 ಸಾವಿರ ರೂ.ವಿನಂತೆ ತೊಗರಿ ಖರೀದಿಸಲು ರಾಜ್ಯದಲ್ಲಿ 330 ತೊಗರಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.
ರೈತ ಬಾಂಧವರೇ,
2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಖರೀದಿ ಪ್ರಕ್ರಿಯೆಗೆ ಸರ್ಕಾರ ಆದೇಶಿಸಿದ್ದು ರಾಜ್ಯದ ಪ್ರಮುಖ ಜಿಲ್ಲೆಗಳಾದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಕೊಪ್ಪಳ, ಬೆಳಗಾವಿ, ಚಿತ್ರದುರ್ಗ, ಚಿಕ್ಕಬಳ್ಳಾಪೂರ ಹಾಗೂ ಕೋಲಾರ ಜಿಲ್ಲೆಗಳ ವ್ಯಾಪ್ತಿಯಲ್ಲಿ ತೆರೆದಿರುವ ಖರೀದಿ ಕೇಂದ್ರಗಳಲ್ಲಿ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ರೂ. 7,550/- ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ರೂ. 450/- ಸೇರಿ ಒಟ್ಟು ರೂ. 8,000/-ನಿಗದಿಪಡಿಸಲಾಗಿರುತ್ತದೆ. ರೈತರು ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಮಾರಾಟ ಮಾಡಿ ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ.
ಸೂಚನೆ:
+ ಪ್ರತಿ ಎಕರೆಗೆ 04 ಕ್ವಿಂಟಲ್ರಂತೆ - ಗರಿಷ್ಠ 40 ಕ್ವಿಂಟಲ್ವರೆಗೆ ಪ್ರತಿ ರೈತರಿಂದ ಖರೀದಿಸಲಾಗುವುದು.
+ ರೈತ ಬಾಂಧವರು ತಮ್ಮ ಹತ್ತಿರದ PACS/FPO/TAPCMS ಗಳಲ್ಲಿ ತಮ್ಮ ಫೂಟ್ಸ್ನ ಎಫ್.ಐ.ಡಿ. ಸಂಖ್ಯೆ ನೀಡಿ ನೋಂದಣಿ ಮಾಡಿಕೊಂಡು ಎಫ್.ಎ.ಕ್ಯೂ, ಗುಣಮಟ್ಟದ ತೊಗರಿ ಮಾರಾಟ ಮಾಡಬಹುದಾಗಿದೆ.
+ ಹೆಚ್ಚಿನ ಮಾಹಿತಿಗಾಗಿ ಉಚಿತ ದೂರವಾಣಿ ಸಂಖ್ಯೆ: 1800 425 1552 ಯನ್ನು ಕಛೇರಿಯ ಸಮಯದಲ್ಲಿ ಸಂಪರ್ಕಿಸಿರಿ.
ಪ್ರಕಟಣೆ: ಕೃಷಿ ಮಾರಾಟ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ.
ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳು ಪ್ರಾರಂಭಿಸಲಾಗಿದೆ.
ರೈತರು ತಮ ಹತ್ತಿರದ ಪಿಎಸಿಎಸ್/ಎಫ್ಪಿಒ/ಟಿಅಪಿಸಿಎಂಎಸ್ ಗಳಿಗೆ ಭೇಟಿ ನೀಡಿ ನೊಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸುದುಪಯೋಗ ಪಡೆದುಕೊಳ್ಳುವಂತೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2024-25ನೇ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಭಂಧಿಸಿದಂತೆ, ಕೇಂದ್ರ ಸರ್ಕಾರದ ಬೆಂಬಲ ಬೆಲೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹಧನ 450 ರೂ. ಪ್ರತಿ ಕ್ವಿಂಟಾಲಗೆ, ಸೇರಿ ಒಟ್ಟು 8,000 ರೂ. ಪ್ರತಿ ಕ್ವಿಂಟಾಲ ರಂತೆ ತೊಗರಿ ಖರೀದಿಸಲು ಅವರು ಭರವಸೆ ನೀಡಿದ್ದರು.
ತೊಗರಿ ಖರೀದಿಯ ನೊಂದಣಿ ಅವಧಿ ಮಾರ್ಚ್ ತಿಂಗಳಾಂತ್ಯದವರೆಗೆ ವಿಸ್ತರಣೆ
''ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತೊಗರಿ ಖರೀದಿಯ ನೋಂದಣಿ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಣೆ ಮಾಡಲಾಗಿದೆ. ಇದುವರೆಗೆ ನೋಂದಣಿ ಮಾಡಿಕೊಳ್ಳದ ರೈತರು ತಕ್ಷಣ ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲೂಕು ಹುಟ್ಟುವಳಿ ಸಹಕಾರ ಸಂಘಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು!"
ಶಿವಾನಂದ ಪಾಟೀಲ್, ಕೃಷಿ ಮಾರುಕಟ್ಟೆ ಸಚಿವರು
ಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿ ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86ಲಕ್ಷ ರೈತರಿಗೆ 91.93ಕೋಟಿ ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ರಾಜ್ಯಾದ್ಯಂತ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 4.09 ಲಕ್ಷ ರೈತರು ತೊಗರಿ ಬೆಳೆಗೆ ವಿಮೆ ಮಾಡಿಸಿದ್ದಾರೆ. ಇದರ ಪೈಕಿ, ಕಲಬುರಗಿ ಜಿಲ್ಲೆಯಲ್ಲಿ 1.70 ಲಕ್ಷ ರೈತರು, ವಿಜಯಪುರ ಜಿಲ್ಲೆಯಲ್ಲಿ 1.08 ಲಕ್ಷ ರೈತರು, ಬೆಳಗಾವಿ ಜಿಲ್ಲೆಯಲ್ಲಿ 1213 ರೈತರು ಬೀದರ್ ಜಿಲ್ಲೆಯಲ್ಲಿ 82384 ರೈತರು ಮತ್ತು ಯಾದಗಿರಿ ಜಿಲ್ಲೆಯಲ್ಲಿ 6390 ರೈತರು, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿದ್ದಾರೆ.
ಸ್ಥಳೀಯ ವಿಕೋಪದಡಿ ರಾಜ್ಯಾದ್ಯಂತ ತೊಗರಿ ಬೆಳೆದ 1.86ಲಕ್ಷ ರೈತರಿಗೆ 91.93ಕೋಟಿ ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಸಚಿವರು ವಿವರ ಒದಗಿಸಿದರು.
ಕಲಬುರಗಿ ಜಿಲ್ಲೆಯ 1.69ಲಕ್ಷ ರೈತರಿಗೆ ರೂ.70.47 ಕೋಟಿ ವಿಮಾ ಪರಿಹಾರವನ್ನು ಇತ್ಯರ್ಥಪಡಿಸಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ಕೊಲ್ಲೋತ್ತರ ಬೆಳೆ ನಷ್ಟಕ್ಕಾಗಿ 2.74 ಕೋಟಿ ವಿಮೆ ಪರಿಹಾರ ಇತ್ಯರ್ಥಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಪೈಕಿ, ಕಲಬುರಗಿ ಜಿಲ್ಲೆಯ 2.54 ಕೋಟಿ ಒಳಗೊಂಡಿರುತ್ತದೆ ಎಂದು ಅವರು ಸದನಕ್ಕೆ ಉತ್ತರ ನೀಡಿದರು.
ಕಲ್ಬುರ್ಗಿ ಜಿಲ್ಲೆಯಲ್ಲಿ 6.27 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆಯಾಗಿದ್ದು ನವೆಂಬರ್ ನಲ್ಲಿ ವಾಡಿಕೆಗಿಂತ ಅಧಿಕ ಮಳೆ ಕೊರತೆ ಉಂಟಾಗಿದೆ. ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸಮೀಕ್ಷೆಗಳ ಪ್ರಕಾರ ಶೇಕಡಾ 1.82 ಲಕ್ಷ ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅದೇ ರೀತಿ ವಿಜಯಪುರ ಜಿಲ್ಲೆಯಲ್ಲಿ ನವೆಂಬರ್ ತಿಂಗಳಿನಲ್ಲಿ ಶೇಕಡಾ 80 ರಷ್ಟು ಮಳೆ ಕೊರತೆಯಾಗಿದ್ದು ಜೊತೆಗೆ ಅಕ್ಟೋಬರ್ ಎರಡನೇ ವಾರದಿಂದ ಮಂಜಿನ ಭಾದೆ ಕೂಡಾ ತೀವ್ರಗೊಂಡು ಹೂವುಗಳು ಉದುರಿವೆ.
ಬೆಳಗಾವಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 14,529 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ನವೆಂಬರ್ ಮಾಹೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆ ಉಂಟಾಗಿದೆ. ಇದೇ ರೀತಿ ಬೀದರ್ ನಲ್ಲಿ 2236 ಹೆಕ್ಟೇರ್ ಪ್ರದೇಶದಲ್ಲಿ ತೊಗರಿಬೆಳೆ ಒಣಗಿರುವ ಬಗ್ಗೆ ವರದಿಯಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 194.20 ಹೆಕ್ಟೇರ್ ಪ್ರದೇಶದಲ್ಲಿ ತೊಗರಿಬೆಳೆ ಹಾನಿಯಾಗಿದೆ ಎಂದು ಸಚಿವರು ವಿವರ ಒದಗಿಸಿದರು.
ವಿಜಯಪುರ ಜಿಲ್ಲೆಯಲ್ಲಿ ಅಂದಾಜು 5.35ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಗೊಂಡಿರುತ್ತದೆ. ಜಿಲ್ಲೆಯಲ್ಲಿ ಸಾಮಾನ್ಯವಾಗಿ 2024ರ ನವೆಂಬರ್ ತಿಂಗಳಿನಲ್ಲಿ ವಾಡಿಕೆಯಂತೆ 21 ಮಿ. ಮೀ ಮಳೆಯಾಗಬೇಕಿದ್ದು, ಆದರೆ, ಕೇವಲ ವಾಸ್ತವವಾಗಿ 4.1 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.80 ರಷ್ಟು ಮಳೆ ಕೊರತೆಯಾಗಿರುತ್ತದೆ.
ಬೆಳೆ ಕಟಾವು ಆದ ನಂತರ ಇಳುವರಿ ಆಧಾರದ ಮೇಲೆ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯ(Pradan mantri fasal bheema yojane) ಮಾರ್ಗಸೂಚಿ ಅನ್ವಯ ಬೆಳೆ ವಿಮೆ ಇತ್ಯರ್ಥಪಡಿಸಲಾಗುವುದು. ತೊಗರಿ ಬೆಳೆಯ ಬೆಳೆ ಕಟಾವು ಪ್ರಯೋಗಗಳು ಪೂರ್ಣವಾದ ತರುವಾಯ, ಇಳುವರಿಯಲ್ಲಿ ಕುಂಠಿತವಾಗುವ ಪ್ರಮಾಣವನ್ನು ಅಂದಾಜಿಸಬಹುದಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಅರ್ಹತೆ ಇರುವ ರೈತ : ಫಲಾಬುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಿಳಿಸಿದರು.
ವಿಧಾನ ಪರಿಷತ್ತಿನ ಪ್ರಶೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನ ಆಯವ್ಯಯ ಮಂಡನೆ ಸಂದರ್ಭದಲ್ಲಿ ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ ಬೆಳೆ ಸಾಲದ ಮಿತಿಯನ್ನು ರೂ.3.00 ಲಕ್ಷದಿಂದ ರೂ. 5.00 ಲಕ್ಷ ಏರಿಸಲಾಗಿದ್ದು, ಈ ಮಿತಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು 2023-24ನೇ ಸಾಲಿನಲ್ಲಿ 6,744 ರೈತರಿಗೆ ರೂ. 290.51 ಕೋಟಿ ಮತ್ತು 2024-25ನೇ ಸಾಲಿನಲ್ಲಿ 2025ನೇ ಫೆಬ್ರವರಿ 28 ರ ವರೆಗೆ 13,689 ರೈತರಿಗೆ ರೂ 589.12 ಕೋಟಿ ಮೊತ್ತದ ಸಾಲ ವಿತರಿಸಲಾಗಿರುತ್ತದೆ
2024-25ನೇ ಸಾಲಿನಲ್ಲಿ 21.78 ಲಕ್ಷ ರೈತರಿಗೆ 18,960 ಕೋಟಿ ರೂ. ಕೃಷಿ ಸಾಲ(crop loan) ವಿತರಿಸಲಾಗಿದೆ. ರಿಯಾಯತಿ ಬಡ್ಡಿ ದರದಲ್ಲಿ ನೀಡುವ ಪುನರ್ಧನದ ಮಿತಿಯನ್ನು ನಬಾರ್ಡ್ ಶೇ.58ರಷ್ಟು ಕಡಿಮೆ ಮಾಡಿದ್ದರೂ ಸಹ, ನಿಗದಿತ ಗುರಿಯನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ. ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲವನ್ನು(Bele sala) ವಿತರಿಸುವ ಗುರಿಯನ್ನು ಹೊಂದಲಾಗಿದೆ.
2023-24ನೇ ಸಾಲಿನ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದಂತೆ, ಡಿಸಿಸಿ (DCC) ಹಾಗೂ ಪಿಕಾರ್ಡ್ (PCARD) ಬ್ಯಾಂಕುಗಳಿಗೆ ಸಂಬಂಧಿಸಿದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ 240 ಕೋಟಿ ರೂ. ಬಡ್ಡಿಯನ್ನು ಮನ್ನಾ (Bele sala baddi manna)ಮಾಡಲಾಗಿದೆ.
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list
ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.
ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.
ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ
ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ/farmer" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು/Submit" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
ಅರ್ಹತೆ ಇರುವ ರೈತ : ಫಲಾಬುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಿಳಿಸಿದರು.
ವಿಧಾನ ಪರಿಷತ್ತಿನ ಪ್ರಶೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನ ಆಯವ್ಯಯ ಮಂಡನೆ ಸಂದರ್ಭದಲ್ಲಿ ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ ಬೆಳೆ ಸಾಲದ ಮಿತಿಯನ್ನು ರೂ.3.00 ಲಕ್ಷದಿಂದ ರೂ. 5.00 ಲಕ್ಷ ಏರಿಸಲಾಗಿದ್ದು, ಈ ಮಿತಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು 2023-24ನೇ ಸಾಲಿನಲ್ಲಿ 6,744 ರೈತರಿಗೆ ರೂ. 290.51 ಕೋಟಿ ಮತ್ತು 2024-25ನೇ ಸಾಲಿನಲ್ಲಿ 2025ನೇ ಫೆಬ್ರವರಿ 28 ರ ವರೆಗೆ 13,689 ರೈತರಿಗೆ ರೂ 589.12 ಕೋಟಿ ಮೊತ್ತದ ಸಾಲ ವಿತರಿಸಲಾಗಿರುತ್ತದೆ
2024-25ನೇ ಸಾಲಿನಲ್ಲಿ 21.78 ಲಕ್ಷ ರೈತರಿಗೆ 18,960 ಕೋಟಿ ರೂ. ಕೃಷಿ ಸಾಲ(crop loan) ವಿತರಿಸಲಾಗಿದೆ. ರಿಯಾಯತಿ ಬಡ್ಡಿ ದರದಲ್ಲಿ ನೀಡುವ ಪುನರ್ಧನದ ಮಿತಿಯನ್ನು ನಬಾರ್ಡ್ ಶೇ.58ರಷ್ಟು ಕಡಿಮೆ ಮಾಡಿದ್ದರೂ ಸಹ, ನಿಗದಿತ ಗುರಿಯನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ. ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲವನ್ನು(Bele sala) ವಿತರಿಸುವ ಗುರಿಯನ್ನು ಹೊಂದಲಾಗಿದೆ.
2023-24ನೇ ಸಾಲಿನ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದಂತೆ, ಡಿಸಿಸಿ (DCC) ಹಾಗೂ ಪಿಕಾರ್ಡ್ (PCARD) ಬ್ಯಾಂಕುಗಳಿಗೆ ಸಂಬಂಧಿಸಿದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ 240 ಕೋಟಿ ರೂ. ಬಡ್ಡಿಯನ್ನು ಮನ್ನಾ (Bele sala baddi manna)ಮಾಡಲಾಗಿದೆ.
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list
ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.
ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.
ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ
ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ/farmer" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು/Submit" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
2023-24ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆಯ(WBCIS) ಪರಿಹಾರವನ್ನು ಉತ್ತರ ಕನ್ನಡ ಜಿಲ್ಲೆಯ ರೈತರಿಗೆ ನೀಡದ ಹಿನ್ನೆಲೆಯಲ್ಲಿ, ಸಂಸದನಾಗಿ ಕೇಂದ್ರ ಸರಕಾರದ ಗಮನಕ್ಕೆ ತಂದಿರುವುದಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಇದನ್ನು ಪರಿಗಣಿಸಿ ಕೇಂದ್ರ ಸರಕಾರವು 6-3-2025ರಂದು ಕ್ಷೇಮಾ ಇನ್ಸೂರೆನ್ಸ್ ಕಂಪನಿಗೆ ಒಂದು ವಾರದಲ್ಲಿ ಪರಿಹಾರ ವಿತರಿಸುವಂತೆ ಆದೇಶಿಸಿತು.
ಆದರೆ, ವಿಮಾ ಕಂಪನಿಯವರು ಪುನರ್ ಪರಿಶೀಲನೆಗಾಗಿ ಮನವಿ ಸಲ್ಲಿಸಿದ್ದನ್ನು ಕೇಂದ್ರ ಸರಕಾರ ತಿರಸ್ಕರಿಸಿ, ಮತ್ತೆ ಸ್ಪಷ್ಟ ಆದೇಶ ನೀಡಿದೆ. ಏಳು ದಿನದೊಳಗೆ ಪರಿಹಾರ ವಿತರಿಸದಿದ್ದರೆ, ಕಂಪನಿಯ ಮೇಲೆ ಆಡಳಿತಾತ್ಮಕ ಕ್ರಮ ಮತ್ತು ದಂಡ ವಿಧಿಸಲಾಗುವುದು ಎಂದು ಸೂಚಿಸಿದೆ ಎಂದು ಸಂಸದರು ತಿಳಿಸಿದ್ದಾರೆ.
Bele vime-ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ನಿಯಮಿತದ ವತಿಯಿಂದ 2024-25 ನೇ ಸಾಲಿನ ಗಿರಿಜನ ಉಪ ಯೋಜನೆಯಡಿಯಲ್ಲಿ ಕುರಿ/ಮೇಕೆ ಘಟಕ ಪೂರೈಕೆ ಯೋಜನೆಗೆ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಪಂಗಡದ ಸದಸ್ಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
16 ರಿಂದ 60 ವರ್ಷದೊಳಗಿನ ಮಹಿಳಾ/ಪುರುಷ ಸದಸ್ಯರು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಡಿ 10 ಸುಧಾರಿತ ಹೆಣ್ಣು ಕುರಿ/ಮೇಕೆ, ಟಗರು/ಹೋತ ಒಟ್ಟು ಘಟಕ ದರ ರೂ.66,000/ಗಳಿದ್ದು, ಶೇ.90 ರಷ್ಟು ಸಹಾಯಧನ ಹೊಂದಿರುತ್ತದೆ.
ಹೆಚ್ಚಿನ ವಿವರಗಳಿಗೆ ಹತ್ತಿರದಲ್ಲಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ಅಥವಾ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿತು ಮತ್ತು ಅಭಿವೃದ್ದಿ ನಿಗಮ, ನಿಯಮಿತ ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕುರಿತು ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Koli sakanike-ಉಚಿತ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ
ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ.
ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕೋಳಿ ಮರಿಗಳನ್ನು ವಿತರಿಸಲಾಗುವುದು. ಜೇನು, ಕುರಿ, ಹಸು ಸಾಕಾಣಿಕೆಗೆ ಪ್ರೋತ್ಸಾಹ ನೀಡುತ್ತಿರುವ ಮಾದರಿಯಲ್ಲಿ ನಾಟಿ ಕೋಳಿ ಸಾಕಾಣಿಕೆ ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬಡ ಕುಟುಂಬಗಳ ಮಹಿಳೆಯರಿಗೆ ತಲಾ 20 ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುವುದು. ಪ್ರತಿ ತಾಲೂಕಿಗೆ 106 ಫಲಾನುಭವಿಗಳಂತೆ ಗುರಿ ನಿಗದಿಪಡಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿನ ರೈತ ಮಹಿಳೆಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘದ ಮಹಿಳಾ ಸದಸ್ಯರಿಗೆ, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಯೋಜನೆಯಡಿ ಆದ್ಯತೆ ನೀಡಲಾಗುವುದು.
ನಾಟಿ ಕೋಳಿಗಳಿಗೆ ಪ್ರಸ್ತುತ ಬೇಡಿಕೆ ಹೆಚ್ಚಾಗಿದೆ. ಇವುಗಳ ಸಾಕಾಣೆಗೆ ಹೆಚ್ಚು ಖರ್ಚಾಗುವುದಿಲ್ಲ. ಮನೆ ಮುಂದೆ ಹಿತ್ತಲುಗಳಲ್ಲಿ ಕೋಳಿ ಸಾಕಬಹುದು, ವೆಚ್ಚಕ್ಕಿಂತ ಅಧಿಕ ಲಾಭ ಸಿಗುತ್ತದೆ. ಇವುಗಳ ಸಾಕಾಣಿಕೆಗೆ ಹೆಚ್ಚಿನ ಶ್ರಮ ಅಗತ್ಯವಿರುವುದಿಲ್ಲ. ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಆರ್ಥಿಕ ಸಬಲತೆ ಸಾಧಿಸಲು ತಲಾ 20 ಕೋಳಿ ಮರಿ ವಿತರಿಸಲಾಗುವುದು ಎಂದು ಹೇಳಲಾಗಿದೆ.
1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ(Vetarnary department)ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.
ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
Vetarnary department schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ
ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy - https://krushirushi.in/Cattle-shed-subsidy-scheme-1630
ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ರೂ. 2000/- ಮೊತ್ತದ ತರಕಾರಿ ಬೀಜಗಳ ಕಿಟ್ನ್ನು ವಿತರಣೆ ಮಾಡಲಾಗುತ್ತಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಆಧಾರ್ಕಾರ್ಡ್ ಜೇರಾಕ್ಸ್, ಬ್ಯಾಂಕ್ ಪಾಸ್ ಬುಕ್ ಜೇರಾಕ್ಸ್, ಜಾತಿ ಪ್ರಮಾಣ ಪತ್ರ(ಪ.ಜಾ/ಪ.ಪಂ.ದವರಿಗೆ ಮಾತ್ರ) ಗಳನ್ನು ಸಲ್ಲಿಸಿ ತರಕಾರಿ ಬೀಜಗಳ ಕಿಟ್ನ್ನು ಪಡೆಯುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Horticulture-department-schemes
ತೋಟಗಾರಿಕೆ ಇಲಾಖೆಯಿಂದ(Horticulture department schemes) ಸಣ್ಣ ಟ್ರ್ಯಾಕ್ಟರ್(Mini tractor)
• ಡ್ರಾಗನ್ ಪೂಟ್(Dragon fruit), ಈರುಳ್ಳಿ ಶೇಖರಣಾ ಘಟಕಕ್ಕೆ (Onion storage)ಸಹಾಯಧನ
• ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ(green house) ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ ನೀರುಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಲ್ಲಿ ಅರ್ಜಿ ಸಲ್ಲಿಸಬೇಕು
ಆಸಕ್ತ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ (Horticulture department)ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ಅರ್ಜಿದಾರರ ಅಧಾರ್ ಕಾರ್ಡ್ ಪ್ರತಿ.
• ಬ್ಯಾಂಕ್ ಪಾಸ್ ಬುಕ್ ಪ್ರತಿ.
• ಪೋಟೋ.
• ಪಹಣಿ/ಉತಾರ್/RTC.
ರೇಷನ್ ಕಾರ್ಡ ಪ್ರತಿ.
ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.
ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM);
ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(Pradna mantri krishi sinchayi yojane);
ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ(drip irrigation) ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್ರವರೆಗೆ ಶೇಕಡಾ 90%) ಸಹಾಯಧನ.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ (NAREGA)ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ(PMKVY) ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ(NHM) ಸಮುದಾಯ ಕೃಷಿಹೊಂಡ(Farm pond), ಕೃಷಿಹೊಂಡ, ಪ್ಯಾಕ್ಹೌಸ್(Pack house), ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) (Fiber doti)ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್ (Aadhaar card) ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ
https://horticulturedir.karnataka.gov.in/info-2/Facilities+available+to+farmers/kn
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಕಚೇರಿಯನ್ನು
ಸಂಪರ್ಕಿಸುವುದು.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು(Cow) ಅಥವಾ ಎಮ್ಮೆ(Buffelow) ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.
ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
Vetarnary department schemes 2025-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ
ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahvs.karnataka.gov.in/info-2/Schemes+&+Benefits/kn
National livestock mission 2024-ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆ,ಕುರಿ,ಕೋಳಿ,ಮೇಕೆ,ಹಂದಿ ಸಾಕಾಣೆಕೆಗೆ ಅರ್ಜಿ ಆಹ್ವಾನ
ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ, ಮೇಕೆ, ಹಂದಿ ಸಾಕಾಣಿಕೆ ಮತ್ತು ರಸಮೇವು ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.
National livestock mission
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ
(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)
ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.
ಅವಶ್ಯಕ ದಾಖಲಾತಿಗಳು :-
1)ಆಧಾರ,
2)ಪಹಣಿ ಪತ್ರ
3)ಬ್ಯಾಂಕ್ಖಾತೆ ಸಂಖ್ಯೆ,
ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು
4)ಭಾವ ಚಿತ್ರ.
ಕ್ರ.ಸಂ |
ಘಟಕ |
ಸೌಲಭ್ಯಗಳ ವಿವರ |
|
ಹೈನುಗಾರಿಕೆ |
|
1 |
ಮಿಶ್ರತಳಿ ದನಗಳ ನಿರ್ವಹಣೆ (1+1) |
ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ |
|
ಆ. ಸುಧಾರಿತ ಎಮ್ಮೆಗಳ ನಿರ್ವಹಣೆ |
ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ |
|
ಕುರಿ ಸಾಕಾಣಿಕೆ |
|
2 |
ಕುರಿಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ |
|
ಕುರಿಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (10) |
ರೂ. 13,000 ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (20) |
ರೂ. 26,000 ರಂತೆ ಸಾಲ ಸೌಲಭ್ಯ |
|
ಮೇಕೆ ಸಾಕಾಣಿಕೆ |
|
3 |
ಮೇಕೆಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ |
|
ಮೇಕೆಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ |
4 |
ಹಂದಿ ಸಾಕಾಣಿಕೆ (10) |
ರೂ,60,000 ರಂತೆ ಸಾಲ ಸೌಲಭ್ಯ |
|
ಕೋಳಿ ಸಾಕಾಣಿಕೆ |
|
5 |
ಮಾಂಸದ ಕೋಳಿ ಸಾಕಾಣಿಕೆ |
2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ |
|
ಮೊಟ್ಟೆ ಕೋಳಿ ಸಾಕಾಣಿಕೆ |
1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ |
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.
ಈ ಮಾಹಿತಿ ನಿಮಗೆ ಉಪಯೋಗವಾಗಿದ್ದರೆ ಬೇರೆಯವರಿಗೂ ಹಂಚಿಕೊಳ್ಳಿ ಧನ್ಯವಾದಗಳು
]]>ಫೆಬ್ರವರಿ.21ರಂದು ಈ ವಿಷಯವಾಗಿ ಮಾತನಾಡಿದ್ದಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದಿದ್ದರು.
ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದಿದ್ದರು.
ಅದರಂತೆ ಇಂದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ರೂ.4000 ಬಾಕಿ ಹಣವನ್ನು ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ. ಇಂದು ಅನೇಕ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗಿರುವುದಾಗಿ ತಿಳಿದು ಬಂದಿದೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರು, ಈಗಾಗಲೇ ನವೆಂಬರ್ ತಿಂಗಳ ಹಣವನ್ನು ಎಲ್ಲರ ಅಕೌಂಟ್ಗೆ ಹಾಕಿದ್ದೇವೆ. ಡಿಸೆಂಬರ್ ಮತ್ತು ಜನವರಿ ಎರಡು ತಿಂಗಳದ್ದು ಬಾಕಿ ಇದೆ. ಡಿಸೆಂಬರ್ದು ಇವತ್ತು ಬಿಲ್ಲಿಂಗ್ ನಡೀತಾ ಇದೆ. ನಾಲೈದು ದಿನದಲ್ಲಿ ಮಹಿಳೆಯರ ಅಕೌಂಟ್ಗೆ ಹಣ ಜಮಾವಣೆ ಆಗುತ್ತದೆ. ಡಿಸೆಂಬರ್ ಮುಗಿಸಿದ ತಕ್ಷಣ ಜನವರಿ ಮತ್ತು ಫೆಬ್ರವರಿ ತಿಂಗಳದ್ದು ಮತ್ತೆ ತಗೋತೀವಿ. ಆ ಬಳಿಕ ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ಹೇಳಿದರು.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ರಾಜ್ಯ ಸರ್ಕಾರ ವಸತಿ ರಹಿತರಿಗೆ ಗುಡ್ ನ್ಯೂಸ್ ನೀಡಿದ್ದು, ಈ ವರ್ಷ 2.30 ಲಕ್ಷ ಮನೆಗಳ ನಿರ್ಮಾಣ ಮಾಡುವುದಾಗಿ ಘೋಷಿಸಿದೆ.
ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 1.80 ಲಕ್ಷ ಮನೆಗಳು ಮಂಜೂರಾಗಿದ್ದು, ಮೊದಲ ಹಂತದಲ್ಲಿ 36,789, ಎರಡನೇ ಹಂತದಲ್ಲಿ 39,843 ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗಿದೆ.
ಉಳಿದ 1.30 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ 46 ಸಾವಿರ ಮನೆ ಸೇರಿ ಈ ವರ್ಷ 2.30 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವರಾದ ಜಮೀರ್ ಅಹಮದ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಯೋಜನೆಯ ಹೆಸರು- ಪ್ರಧಾನ ಮಂತ್ರಿ ಆವಾಸ್ ( ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ವಸತಿ ಕಲ್ಪಿಸುವ ಯೋಜನೆ)
ಸಹಾಯಧನದ ಮೊತ್ತ
ಎಸ್ ಸಿ ಎಸ್ ಟಿ
ಕೇಂದ್ರದ ಪಾಲು -72,000
ರಾಜ್ಯದ ಪಾಲು-78,000
ಒಟ್ಟು -1,50,000
ಸಾಮಾನ್ಯ ವರ್ಗದವರಿಗೆ
ಕೇಂದ್ರದ ಪಾಲು-72,000
ರಾಜ್ಯದ ಪಾಲು-48,000
ಒಟ್ಟು -1,20,000
ಫಲಾನುಭವಿಯ ಸ್ವಸಹಾಯವಂತಿಕೆ
ಎಲ್ಲಾ ವರ್ಗದ ಫಲಾನುಭವಿಗಳಿಗೆ ಕನಿಷ್ಠ ಒಂದು ಲಕ್ಷ
ಈ ಯೋಜನೆ ಅಡಿಯಲ್ಲಿ ಒದಗಿಸಲಾಗುವ ಆರ್ಥಿಕ ಸಹಾಯದ ಜೊತೆಗೆ ಫಲಾನುಭವಿಯು ಕನಿಷ್ಠ 30,000 ಗಳನ್ನು ಅಥವಾ ತನ್ನ ಸಾಮರ್ಥ್ಯ ಹಾಗೂ ವಸತಿಯ ಅವಶ್ಯಕತೆಗೆ ಅನುಸಾರವಾಗಿ ಸಾಧ್ಯವಾದಷ್ಟು ಸ್ವಂತ ಉಳಿತಾಯ ಹೂಡಿಕೆ ಮಾಡಿ ಹೆಚ್ಚಿನ ಹಾಗೂ ಉತ್ತಮ ಸೌಲಭ್ಯಗಳನ್ನು ಹೊಂದಬಹುದು
ಡಿ ಆರ್ ಐ ಯಡಿ ಸಾಲ ಮತ್ತು ಬಡ್ಡಿಯ ದರ
ಈ ಯೋಜನೆಯಡಿ ಸ್ಥಳೀಯ ಬ್ಯಾಂಕಿನಿಂದ 20000 ವರೆಗೆ ನಾಲ್ಕು ಪರ್ಸೆಂಟ್ ವಾರ್ಷಿಕ ಬಡ್ಡಿ ದರದಲ್ಲಿ ಸಾಲವನ್ನು ಆಯ್ಕೆಯಾದ ಫಲಾನುಭವಿಗಳು ಪಡೆದುಕೊಳ್ಳಲು ಅವಕಾಶವಿರುತ್ತದೆ
ಫಲಾನುಭವಿಯ ಆಯ್ಕೆ
ಕೇಂದ್ರ ಸರ್ಕಾರದಿಂದ ನೀಡಲಾದ ಫಲಾನುಭವಿಗಳ ಪಟ್ಟಿಯಿಂದ ನಿಯಮಾನುಸಾರ ಗ್ರಾಮ ಸಭೆಯಲ್ಲಿ ಆಯ್ಕೆ ಮಾಡಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಪಟ್ಟಿಗೆ ಅನುಮೋದನೆ ಪಡೆಯಲಾಗುವುದು. ನಂತರ ಸಂಬಂಧಪಟ್ಟ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಯ ಅನುಮೋದನೆಯೊಂದಿಗೆ ನಿಗಮದ ಅನುಮೋದನೆ ನೀಡಲಾಗುವುದು.
ಯೋಜನೆಯ ಅನುಷ್ಠಾನ
ಪ್ರತಿ ವರ್ಷ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಗುರಿಗನುಗುಣವಾಗಿ ಗುರಿ ನಿಗದಿಪಡಿಸಲಾಗುವುದು
ಮೀಸಲಾತಿ-SC ST ಶೇಕಡ 60%
ಅಲ್ಪಸಂಖ್ಯಾತ ಶೇಕಡ 15%
ಸಾಮಾನ್ಯ ಶೇಕಡಾ 25%
ಜಿಪಿಎಸ್ ತಂತ್ರಜ್ಞಾನ ಅಳವಡಿಕೆ
2011 12 ನೇ ಸಾಲಿನಿಂದ ಜಿಪಿಎಸ್ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತಿದೆ
ಅವ್ಯವಹಾರವನ್ನು ತಡೆಗಟ್ಟಲು ಹಾಗೂ ಸರ್ಕಾರದ ಹಣ ದುರುಪಯೋಗವಾಗದಂತೆ ನೋಡಿಕೊಂಡು ಫಲಾನುಭವಿಗಳಿಗೆ ವಸತಿ ಸೌಕರ್ಯವನ್ನು ಪಾರದರ್ಶಕತೆಯ ಮೂಲಕ ನೀಡಲು ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ಈ ತಂತ್ರಜ್ಞಾನದ ಉಪಯೋಗಗಳು ಇಂತಿವೆ
ಪ್ರತಿ ಮನೆಯ ಪ್ರಗತಿ ಹಂತದ ಛಾಯಾಚಿತ್ರವನ್ನು ಜಿಪಿಎಸ್ ಕ್ಯಾಮೆರಾ ಮೂಲಕ ಸೆರೆ ಹಿಡಿಯುವುದು
ಒಮ್ಮೆ ವಸತಿ ಸೌಕರ್ಯ ಪಡೆದ ಫಲಾನುಭವಿಗಳ ಪುನರಾವರ್ತನೆಗೆ ತಡೆ
ಛಾಯಾಚಿತ್ರದ ಆಧಾರದ ಮೇಲೆ ಅನುದಾನ ಬಿಡುಗಡೆ
ಮಾಹಿತಿಗಾಗಿ ಎಲ್ಲಾ ಮನೆಗಳ ಛಾಯಾಚಿತ್ರಗಳು ನಿಗಮದ ವೆಬ್ ಸೈಟ್ ನಲ್ಲಿ ಲಭ್ಯ
ಹಣದ ದುರ್ಬಳಕೆಗೆ ತಡೆ
ಅರ್ಹತೆ ಮತ್ತು ಷರತ್ತುಗಳು
ಸಂಬಂಧಪಟ್ಟ ಗ್ರಾಮ ಪಂಚಾಯತ್ ವಾಸಿ ಆಗಿರಬೇಕು
ಮನೆ ನಿವೇಶನ ಹಕ್ಕು ಪತ್ರವನ್ನು ಹೆಂಡತಿ ಹೆಸರಿನಲ್ಲಿ ವಿತರಿಸಬೇಕು
ಬೇರೆ ಯಾವುದೇ ಯೋಜನೆ ಅಥವಾ ಇಲಾಖೆಯಿಂದ ಈಗಾಗಲೇ ವಸತಿ ಸೌಲಭ್ಯ ಪಡೆದಿರಬಾರದು
ಮನೆಗಳ ವಿಸ್ತೀರ್ಣ ಮತ್ತು ವಿನ್ಯಾಸ : ಕನಿಷ್ಠ 25 ಚದರ ಮೀಟರ್ ನೆಲಗಟ್ಟು ವಿಸ್ತೀರ್ಣ ಇರುವಂತೆ ಮನೆ ನಿರ್ಮಿಸಬೇಕು. ಇದಕ್ಕಾಗಿ ಯಾವುದೇ ನಕ್ಷೆ ಅಥವಾ ವಿನ್ಯಾಸ ನಿಗದಿಪಡಿಸಿರುವುದಿಲ್ಲ. ಆದರೆ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಮಣ್ಣು ಹವಾ ಗುಣ ಪರಿಸ್ಥಿತಿ ಸ್ಥಳೀಯವಾಗಿ ಲಭ್ಯವಿರುವ ಸಾಮಗ್ರಿಗಳ ಬಳಕೆ ಇತ್ಯಾದಿ ಅಂಶಗಳನ್ನು ಪರಿಗಣಿಸಿ ಪ್ರದೇಶವಾರು ಮತ್ತು ಬದಲಿ ವಿನ್ಯಾಸಗಳನ್ನು ಅನುಸರಿಸಬಹುದು ಮನೆ ನಿರ್ಮಾಣದ ಪ್ರತಿ ಹಂತದಲ್ಲಿಯೂ ಫಲಾನುಭವಿ ಸಕ್ರಿಯವಾಗಿ ಪಾಲ್ಗೊಂಡು ಒಳ್ಳೆಯ ಗುಣಮಟ್ಟದ ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಹೊಂದಬಹುದು.
ಒಟ್ಟಾರೆ ಆಗಿದ್ದಾಗೆ ಸರ್ಕಾರವು ವಸತಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಧಿಸಬಹುದಾದ ನಿಯಮ ಮತ್ತು ಷರತ್ತುಗಳನ್ನು ತಪ್ಪದೇ ಪಾಲಿಸಬೇಕು
ಮನೆ ನಿರ್ಮಾಣ ಮಾಡುವ ಕ್ರಮ
ಸ್ವಂತ ಫಲಾನುಭವಿಗಳಿಂದ
ಫಲಾನುಭವಿಯೇ ಸ್ವಂತ ತನ್ನ ಮನೆಯನ್ನು ಸ್ಥಳಿಯವಾಗಿ ಅನುಮೋದಿತ ನಕ್ಷೆಗಳನ್ನು ಗುಣವಾಗಿ ಕಟ್ಟಿಕೊಳ್ಳಬಹುದು( ಇದಕ್ಕಾಗಿ ಕಾಮಗಾರಿ ಆದೇಶ ಹೊರಡಿಸಿ ನಿಗದಿತ ಕಂತುಗಳಲ್ಲಿ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆ ಮೂಲಕ ನೀಡಲಾಗುವುದು ನಿರ್ಮಾಣ ಸಂಸ್ಥೆ ಮೂಲಕ ಮನೆ ನಿರ್ಮಾಣಕ್ಕೆ ಅವಕಾಶ ಇರುವುದಿಲ್ಲ )
ಮನೆ ನಿರ್ಮಾಣ ಅವಧಿ
ಕನಿಷ್ಠ ನಾಲ್ಕು ತಿಂಗಳ ಒಳಗಾಗಿ ಮನೆಯನ್ನು ಪೂರ್ಣಗೊಳಿಸುವುದು
ಒದಗಿಸಬೇಕಾದ ದಾಖಲೆಗಳು
ಫಲಾನುಭವಿಯಿಂದ
ವಸತಿಗಾಗಿ ನಿಗದಿತ ಅರ್ಜಿ
ನಿವೇಶನ ಅಥವಾ ಮನೆಯನ್ನು ಸಾಲ ತೀರುವವರೆಗೂ ನಿಗಮದ ಪರವಾಗಿ ಅಡಮಾನ ಪತ್ರ ಬರೆದು ಕೊಡಬೇಕು
ಜಾತಿ ಪ್ರಮಾಣ ಪತ್ರ ಅಥವಾ ಆದಾಯ ಪ್ರಮಾಣ ಪತ್ರ
ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಥವಾ ಕಾರ್ಯನಿರ್ವಹಣಾಧಿಕಾರಿ ಅಥವಾ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಿಂದ
ಗ್ರಾಮ ಪಂಚಾಯಿತಿ ಅಥವಾ ಇಲಾಖೆ ಯೋಜನೆಯ ಅಡಿಯಲ್ಲಿ ನಿಯಮಗಳನ್ನು ಪಾಲಿಸಿರುವ ಬಗ್ಗೆ ಹಾಗೂ ದಾಖಲೆಗಳನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ಬಗ್ಗೆ ದೃಢೀಕರಣ ಪತ್ರ
ನಿಗದಿಪಡಿಸಿದ ನಮೂನೆಗಳಲ್ಲಿ ಪ್ರತಿ ತಿಂಗಳು ಅಥವಾ ವರ್ಷ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಗತಿ ವರದಿಗಳನ್ನು ತಪ್ಪದೆ ಸಲ್ಲಿಸಬೇಕು
ವಸತಿ ಯೋಜನೆಯ ಯಶಸ್ವಿ ಅನುಷ್ಠಾನದ ಬಗ್ಗೆ ಸಂಬಂಧಿಸಿದ ಇತರೆ ಮಾಹಿತಿ ಇತ್ಯಾದಿ
ಹೆಚ್ಚಿನ ವಿವರಗಳಿಗೆ ಈ ಕೆಳಕಂಡವರನ್ನು ಸಂಪರ್ಕಿಸಿ
ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ
ನಂಬರ್ 1 2 3 4
ಐ ಟಿ ಪಾರ್ಕ್ 1ನೇ ಮಾಡಿ ನಾಲ್ಕನೇ ಮುಖ್ಯ ರಸ್ತೆ ಕೈಗಾರಿಕಾ ಪ್ರದೇಶ ರಾಜಾಜಿನಗರ-580044
ದೂರವಾಣಿ-23118888
ಇ-ಮೇಲ್ -[email protected]
ವೆಬ್ ಸೈಟ್ - http://ashraya.kar.nic.in/
ನಿಮ್ಮ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಪಂಚಾಯತ್
ಆಯಾಯ ಸಂಬಂಧಿಸಿದ ಜಿಲ್ಲೆಗಳು
ಸಂಬಂಧಪಟ್ಟ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು
ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು
ಬೆಳೆವಿಮೆ(Bele vime),ಬೆಳೆಹಾನಿ ಪರಿಹಾರ(Bele parihara),ಬೆಂಬಲ ಬೆಲೆ(MSP) ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್ಐಡಿ(FID) ಮಾಡಿಸಲೇಬೇಕು. ಒಂದು ವೇಳೆ ಎಫ್ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್ಐಡಿ ಮಾಡದೆ ಇರುವ ಕೂಡಲೇ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್ಐಡಿ ಮಾಡಿಸಬೇಕು.
ಈವರೆಗೆ ಎಫ್ಐಡಿ ಮಾಡಿಸದೇ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.
ಬೆಳೆ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ(FRUITS PORTAL) ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನಿಂದ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.
ಇದುವರೆಗೂ ಫ್ರುಟ್ಸ್ ನಲ್ಲಿ ನೊಂದಣಿ ಆಗದೇ ಇರುವ ರೈತರು ಆಧಾರ್ ಕಾರ್ಡ್, ಪಹಣಿ, ಜಾತಿ ಪ್ರಮಾಣಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ವಿವರಗಳನ್ನು ಫ್ರುಟ್ಸ್ನಲ್ಲಿ ದಾಖಲಿಸಿಕೊಂಡು ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಹಾಗೂ ವಿವಿಧ ಇಲಾಖೆಗಳ ಸೌಲಭ್ಯ ಪಡೆದುಕೊಳ್ಳುವಂತೆ ಕೋರಲಾಗಿದೆ.
ಫ್ರುಟ್ಸ್ ತಂತ್ರಾಂಶದಲ್ಲಿ ರೈತರು ತಮ್ಮ ಜಮೀನಿನ ವಿವರವನ್ನು ನೊಂದಾಯಿಸಿ, ರೈತರ ಗುರುತಿನ ಚೀಟಿ ಸಂಖ್ಯೆ ಪಡೆದುಕೊಳ್ಳುವುದು ಅಗತ್ಯವಾಗಿರುತ್ತದೆ. ಈ ಮಾಹಿತಿಯು ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳನ್ನು ನೀಡುವುದಲ್ಲದೆ, ಇತರೆ ಇಲಾಖೆಗಳಿಗೂ ಸಹ ಉತ್ತಮ ಮಾಹಿತಿಯಾಗಿರುತ್ತದೆ. ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಂದರ್ಭದಲ್ಲಿ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯಡಿ ಫಲಾನುಭವಿಗಳಾಗಲು ಹಾಗೂ ಪರಿಹಾರ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲು ರೈತರು ಫ್ರುಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಸಿ, ಎಫ್ಐಡಿ ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿದೆ.
ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಕೊಳ್ಳದೇ ಇರುವ ರೈತರು ಕೂಡಲೆ ಫ್ರುಟ್ಸ್ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೆ ಫ್ರುಟ್ಸ್ನಲ್ಲಿ ನೊಂದಣಿ ಮಾಡಿಸಿಕೊಂಡವರು, ಅಂದರೆ ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 01 ಎಕರೆ ಮಾತ್ರ ನಮೂದಿಸಿರುತ್ತಾರೆ, ಅಂತಹವರಿಗೆ ಕೇವಲ 01 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ, ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ಪಹಣಿಯ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ ಪಾವತಿಯಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಫ್ರುಟ್ಸ್ ನೊಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳನ್ನು ಕೂಡಲೆ ಜೋಡಣೆ ಮಾಡಲು ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳು, ನಾಡ ಕಚೇರಿ, ರೈತ ಸಂಪರ್ಕ ಕೇಂದ್ರ, ರೇಷ್ಮೆ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಬಹುದು.
ನಿಮ್ಮ FID ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.
ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.
ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.
ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು
]]>ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದ್ದು, ರೈತರು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಅವರು ತಿಳಿಸಿದ್ದಾರೆ.
ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಿದ್ದು, ಪ್ರತಿ ಕ್ವಿಂಟಾಲ್ ಗೆ 5,940 ರೂ.ನಿಗದಿಪಡಿಸಲಾಗಿದೆ. ಪ್ರತಿ ಎಕರೆಗೆ 5 ಕ್ವಿಂಟಾಲ್ ನಂತೆ ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಖರೀದಿ ಮಾಡಲಾಗುವುದು.
ಖರೀದಿ ಪ್ರಕ್ರಿಯೆ ನಂತರ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮಾ ಮಾಡಲಾಗುವುದು. ರೈತರು ತಮ್ಮ ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲೂಕು ಹುಟ್ಟುವಳಿ ಸಹಕಾರ ಸಂಘಗಳಲ್ಲಿ ತಮ್ಮ ಫ್ರೂಟ್ಸ್ ನ ಎಫ್ಐಡಿ ಸಂಖ್ಯೆ ನೀಡಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
Safflower MSP-ಈ ಜಿಲ್ಲೆಯ ರೈತರಿಂದ ಬೆಂಬಲ ಬೆಲೆಯಲ್ಲಿ ಕುಸುಬಿ ಖರೀದಿ
ಕರ್ನಾಟಕದ ಕುಸುಬೆ(Safflower) ಬೆಳೆಗಾರರಿಗೆ ಸರ್ಕಾರವು ಸಂತಸದ ಸುದ್ದಿಯನ್ನು ನೀಡಿದೆ. ಮಾರುಕಟ್ಟೆಯಲ್ಲಿ ಕುಸಿದಿರುವ ಕುಸುಬೆ ಬೆಲೆಗೆ ಪರಿಹಾರವಾಗಿ, ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಪ್ರತಿ ಕ್ವಿಂಟಾಲ್ಗೆ ₹5,940 ದರವನ್ನು ನಿಗದಿಪಡಿಸಲಾಗಿದೆ.
ಇದರಿಂದಾಗಿ ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಕೃಷಿ ಮಾರುಕಟ್ಟೆ ಸಚಿವರು ಈ ಕುರಿತು ಮಾಹಿತಿ ನೀಡಿದ್ದು, ಮಾರುಕಟ್ಟೆಯಲ್ಲಿನ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಒಳಗಾಗಿದ್ದ ರೈತರಿಗೆ ಈ ಬೆಂಬಲ ಬೆಲೆ ಸಹಾಯ ಮಾಡಲಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಕುಸುಬೆ(Kusube) ಕಟಾವು ಪ್ರಕ್ರಿಯೆ ಆರಂಭವಾಗಿದ್ದು, ಮಾರ್ಚ್ ಅಂತ್ಯದವರೆಗೆ ನಡೆಯಲಿದೆ ಮತ್ತು ಏಪ್ರಿಲ್ ವರೆಗೂ ಮಾರುಕಟ್ಟೆಗೆ ಕುಸುಬೆ ಆವಕವಾಗಲಿದೆ.
ರೈತರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುವ ಬದಲು, ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುವಂತೆ ಸಚಿವರು ಮನವಿ ಮಾಡಿದ್ದಾರೆ.
]]>
2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)
1.ಅಶ್ವಿನಿ-
ದಿನಾಂಕ-14-4-2025
ಸಾಮಾನ್ಯ ಮಳೆ
ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,
2.ಭರಣಿ
ದಿನಾಂಕ-28-4-2025
ಸಾಮಾನ್ಯ ಮಳೆ
ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು
3.ಕೃತಿಕಾ
ದಿನಾಂಕ-11-5-2025
ಸಾಮಾನ್ಯ ಮಳೆ
ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು
4.ರೋಹಿಣಿ-
ದಿನಾಂಕ-25-5-2025
ಉತ್ತಮ ಮಳೆ
ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು
5.ಮೃಗಶಿರ
ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ
ಉತ್ತಮ ಮಳೆ
ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು
6.ಆರಿದ್ರಾ
ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)
ಉತ್ತಮ ಮಳೆ
ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.
7.ಪುನರ್ವಸು
ದಿನಾಂಕ-6-7-2025
ಉತ್ತಮ ಮಳೆ
ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು.
8.ಪುಷ್ಯ
ದಿನಾಂಕ-20-7-2025
ಉತ್ತಮ ಮಳೆ
ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ) ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.
9.ಆಶ್ಲೇಷ
ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ
ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು
10.ಮಘ
ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ
ಉತ್ತಮ ಮಳೆ
ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.
11.ಹುಬ್ಬ
ದಿನಾಂಕ-31-8-2025
ಉತ್ತಮ ಮಳೆ
ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ. ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ
12.ಉತ್ತರ
ದಿನಾಂಕ-13-09-2025
ಉತ್ತಮ ಮಳೆ
ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ
13.ಹಸ್ತ
ದಿನಾಂಕ-27-9-2025
ಉತ್ತಮ ಮಳೆ
14.ಚಿತ್ತ
ದಿನಾಂಕ-11-10-2025
ಉತ್ತಮ ಮಳೆ
ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.
15.ಸ್ವಾತಿ
ದಿನಾಂಕ-24-10-2025
ಉತ್ತಮ ಮಳೆ
ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.
16.ವಿಶಾಖ
ದಿನಾಂಕ-6-11-2025
ಉತ್ತಮ ಮಳೆ
ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.
ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.
https://krushirushi.in/contact-us
ಇಂತಿ ನಿಮ್ಮ
ಶಿವನಗೌಡ ಪಾಟೀಲ
M.Sc(ಕೃಷಿ), ಕೀಟಶಾಸ್ತ್ರ
]]>
ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್ಕ್ಯೂಬೇಷನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.
ಪಿಎಂಎಫ್ಎಮ್ ಇ ಯೋಜನೆಯಡಿ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಅರ್ಜಿ ಆಹ್ವಾನ-pmfme subsidy scheme
ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ ಹತ್ತು ದಿನಗಳ ಕಾಲ ಕುರಿ ಸಾಕಾಣಿಕೆ ತರಬೇತಿಯನ್ನು ದಿನಾಂಕ 2/4/2025 ರಿಂದ 11/4/2025 ವರೆಗೆ ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ಕಲಿಸುವ ವಿಷಯಗಳು
1)ಕುರಿ ತಳಿಗಳು
2)ಕುರಿಗೆ ಬರುವಂತಹ ವಿವಿಧ ರೋಗಗಳು
3)ಕುರಿಗಳನ್ನು ಕೊಬ್ಬಿಸುವ ವಿಧಾನ
4)ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಹಿತಿ
5)ವಿವಿಧ ಔಷಧ ಉಪಚಾರಗಳು
6)ಕುರಿ ಶಡ್ ನಿರ್ಮಾಣ
7)ಲೋನ್ ಗಳ ಮಾಹಿತಿ
8)ಸಬ್ಸಿಡಿಗಳ ಮಾಹಿತಿ
9) ಪ್ರಾಜೆಕ್ಟ್ ರಿಪೋರ್ಟ್ ಮಾಹಿತಿ
10) ಮನೆಮದ್ದುಗಳ ಮಾಹಿತಿ
ಇನ್ನು ಇತರೆ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು
ಆಸಕ್ತರು ಕೂಡಲೇ ಕೆಳಗಡೆ ನಮೂದಿಸಿದ ಮೊಬೈಲ್ ನಂಬರ್ ಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಿ
8660219375
.
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಇರುವ ಲೀಡ್ ಬ್ಯಾಂಕ್ ತರಬೇತಿ ಕೇಂದ್ರಗಳಲ್ಲಿ ತರಭೇತಿ ಆಯೋಜಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಲೀಡ್ ಬ್ಯಾಂಕ್ ಸಂಪರ್ಕಿಸಿ
]]>
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ(Pradan mantri kisan samman yojane)
ಅಡಿ ಅರ್ಹ ಎಲ್ಲ ರೈತರಿಗೆ ಸೌಲಭ್ಯ ನೀಡಲು ಕೇಂದ್ರ ಸರ್ಕಾರ ಸಿದ್ದವಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಹೇಳಿದರು.
ಲೋಕಸಭೆಯಲ್ಲಿ ಮಂಗಳವಾರ ಪ್ರಶೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಭೂ ರಹಿತರಿಗೆ ಈ ಸೌಲಭ್ಯ ನೀಡುವುದಿಲ್ಲ. ಆದರೆ, ತುಂಡು ಕೃಷಿ ಭೂಮಿಯನ್ನಾದರೂ ಹೊಂದಿರಬೇಕು ಎಂದು ವಿವರಿಸಿದರು.
'ಈ ಯೋಜನೆಯಡಿ ಕೇಂದ್ರ ಸರ್ಕಾರವು ಈವರೆಗೆ 19 ಕಂತುಗಳಲ್ಲಿ ₹3.68 ಲಕ್ಷ ಕೋಟಿ ಮೊತ್ತವನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದೆ' ಎಂದರು.
ಯೋಜನೆಯ ಭಾಗವಾಗಿಲ್ಲದ ಎಲ್ಲ ಅರ್ಹ ರೈತರಿಗೆ ವಾರ್ಷಿಕ ₹6,000 ನಗದು ಪ್ರಯೋಜನ ನೀಡಲು ಸರ್ಕಾರ ಸಿದ್ಧವಾಗಿದೆ. ಅಂತಹ ರೈತರಿಗೆ ಹಿಂದಿನ ಕಂತುಗಳನ್ನು ನೀಡಲು ಸಿದ್ಧರಿದ್ದೇವೆ. ಅಂತಹ ರೈತರನ್ನು ಗುರುತಿಸಿ ಯೋಜನೆಯಲ್ಲಿ ಸೇರಿಸಲು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಅವರು ಕೋರಿದರು.
ಪಿಎಂ ಕಿಸಾನ್(kisan samman) ಅರ್ಹತೆಯ ಮಾನದಂಡಗಳೇನು?
ಎಲ್ಲ ಅರ್ಹ ಫಲಾನುಭವಿಗಳು ಕನಿಷ್ಠ ಪ್ರಮಾಣದ ಭೂಮಿ ಹೊಂದಿರಬೇಕು. ಇ-ಕೆವೈಸಿ ಮಾಡಿಸಿಕೊಳ್ಳಬೇಕು ಮತ್ತು ಪಿಎಂ-ಕಿಸಾನ್ ಪೋರ್ಟಲ್ನಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು.
ನಿಧಿಯನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಗಾಯಿಸಲಾಗುತ್ತದೆ ಎಂದು ಅವರು ಹೇಳಿದರು.
ಇಲ್ಲಿಯವರೆಗೂ 19 ಕಂತುಗಳಲ್ಲಿ 3.68 ಲಕ್ಷ ಕೋಟಿ ಪಿಎಂ ಕಿಸಾನ್ ಹಣ ರೈತರ ಖಾತೆಗೆ
ಇದುವರೆಗೆ 3.68 ಲಕ್ಷ ಕೋಟಿ ರೂಪಾಯಿಗಳನ್ನು 19 ಕಂತುಗಳಲ್ಲಿ ದೇಶದಾದ್ಯಂತದ ರೈತರಿಗೆ ವಿತರಿಸಲಾಗಿದೆ
ನಿಮಗೇಷ್ಟು ಜಮಾ ಹೀಗೆ ಚೆಕ್ ಮಾಡಿ-Pmkisan beneficiary status
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಮೊದಲು know your status ಮೇಲೆ ಕ್ಲಿಕ್ ಮಾಡಿ
ನಂತರ know your register number ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ
ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.
ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ
ನಂತರ update your details ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ
Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.
ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ
Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.
FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ ಕಾರಣ ಮತ್ತು ಪರಿಹಾರ
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
fruitspmk.gov.in ಪೋರ್ಟಲ್ ನಲ್ಲಿ |
|||
1 |
ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ |
ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು |
ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ (NIC) ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ. ಆ) ಸಮಸ್ಯಾತ್ಮಕ ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ. |
2 |
ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು |
ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ |
ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ |
3 |
ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು |
ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ |
ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ |
4 |
ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ |
ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ |
OPERATOR ಲಾಗಿನ್ (RSK, ADA office, JDA office) OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು |
5 |
01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ |
ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ |
ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ) |
6 |
Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು |
ಜಿಲ್ಲೆಗಳಲ್ಲಿ OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ |
AAO ಲಾಗಿನ್ (RSK, ADA office, JDA office) AAO ಲಾಗಿನ್ನಲ್ಲಿ ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ, ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
7 |
ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ |
ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ) |
AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ. |
8 |
PFMS rejected |
Aadhaar Number is not seeded in NPCI |
ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ |
Bank Name And IFSC Code are not related to each other |
ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ |
||
Bank Name is not as per PFMS Bank Master. |
|||
Beneficiary is rejected as Account Type is other than SB / SBA / JD |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ) |
||
Duplicate Beneficiary Name , Bank Account No and Bank Name not allowed for same scheme |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
IFSC Code either not present or currently inactive in tbl BankBranch |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
Incorrect Aadhaar Number |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
One or more mandatory tags values are missing. |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
||
Rejected by Bank, Account No does not exist in Bank/INVALID/CLOSED |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
9 |
Amount credited to Account Number-NA |
Aadhaar number based payment by GoI |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ. |
10 |
PAYMENT STOPPED BY STATE |
XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ |
ಕೇಂದ್ರ ಸರ್ಕಾರ |
11 |
Transaction failed |
ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ. |
12 |
ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ |
OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ |
ಕೇಂದ್ರ ಸರ್ಕಾರ |
13 |
ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು |
ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ. |
ಕೇಂದ್ರ ಸರ್ಕಾರ ದ pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ. |
ರಾಜ್ಯ ಸರ್ಕಾರದಿಂದ ಅನರ್ಹರ ರೇಷನ್ ಕಾರ್ಡ಼್(Cancelled ration card list)ಈಗಾಗಲೇ ಒಂದಷ್ಟು ರದ್ದುಗೊಳಿಸಲಾಗಿದೆ. ಈಗ ಮುಂದುವರೆದು ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಹಚ್ಚೋದಕ್ಕೆ ಸಮಿತಿ ರಚನೆ ಮಾಡಿದೆ.
ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅವರಿಗೆ ಸಿಗುತ್ತಿರುವ ಸೌಲಭ್ಯವನ್ನು ಅರ್ಹರಿಗೆ ದೊರಕಿಸಿಕೊಡುವ ಸದುದ್ದೇಶದಿಂದ ಗ್ರಾಮ ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
Cancelled ration card list-ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ,ಇಲ್ಲಿದೆ ರದ್ದಾದ ರೇಷನ್ ಕಾರ್ಡ್ ಲಿಸ್ಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ e-Ration Card ಮೇಲೆ ಕ್ಲಿಕ್ ಮಾಡಿ
ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ ಮೇಲೆ ಕ್ಲಿಕ್ ಮಾಡಿ,Go ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ರದ್ದಾದ ರೇಷನ್ ಕಾರ್ಡ್ ಪಟ್ಟಿ ದೊರೆಯಲಿದೆ
ಸ್ವಂತ ಕಾರು ಇರುವವರಿಗೆ 'BPL' ಕಾರ್ಡ್ ಇಲ್ಲ ಎಂದು ಆಹಾರ ಸಚಿವ K.H ಮುನಿಯಪ್ಪಮಹತ್ವದ ಘೋಷಣೆ ಮಾಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವರು ಸ್ವಂತ ಕಾರು ಇರುವವರಿಗೆ 'BPL' ಕಾರ್ಡ್ ಇಲ್ಲ, ಸ್ವಂತ ಕಾರು ಇರುವವರಿಗೆ 'BPL' ಕಾರ್ಡ್ ನೀಡದಿರಲು ಚಿಂತನೆ ನಡೆಸಲಾಗಿದೆ ಎಂದು K.H ಮುನಿಯಪ್ಪಮಹತ್ವದ ಘೋಷಣೆ ಮಾಡಿದ್ದಾರೆ.
ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ, ಯೆಲ್ಲೋ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದನ್ನು ವಾಪಸ್ಸು ಪಡೆಯಲು ಚಿಂತನೆ ನಡೆಸಲಾಗುತ್ತಿದೆ ಎಂದರು.ಅದೇ ರೀತಿ ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ K.H ಮುನಿಯಪ್ಪ ಹೇಳಿದರು. ನೀತಿ ಸಂಹಿತಿ ಜಾರಿ ಹಿನ್ನೆಲೆ ರೇಷನ್ ಕಾರ್ಡ್ ವಿತರಣೆ ಸ್ಥಗಿತವಾಗಿತ್ತು. ಈಗ ಹೊಸ ಪಡಿತರ ಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಜೊತೆಗೆ ಪಡಿತರಕಾರ್ಡ್ ಗೆ ಕೂಡಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ ಎಂದರು.
ಪಡಿತರದಾರರಿಗೆ ಸೆಪ್ಟೆಂಬರ್ ತಿಂಗಳಿನಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಆಂಧ್ರ ಹಾಗೂ ತೆಲಂಗಾಣ ಅಕ್ಕಿ ನೀಡಲು ಮುಂದಾಗಿದೆ, ಒಂದು ವಾರದಲ್ಲಿ ಅಲ್ಲಿನ ಅಧಿಕಾರಿಗಳು ಅಕ್ಕಿ ನೀಡುವ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ . ಆಹಾರ ನಿಗಮದ ದರದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡಿದ್ದೇವೆ, ಕೆಜಿಗೆ 34 ರೂ ದರದಲ್ಲಿ ಅಕ್ಕಿ ನೀಡುವಂತೆ ಕೇಳಿದ್ದೇವೆ. ಸದ್ಯ, 5 ಕೆಜಿ ಅಕ್ಕಿ ಬದಲಾಗಿ ಜನರಿಗೆ ಹಣ ಹಾಕುತ್ತಿದ್ದೇವೆ, ಸೆಪ್ಟೆಂಬರ್ ತಿಂಗಳಿನಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.5 ಕೆಜಿ ಅಕ್ಕಿ ಬದಲು ಇದುವರೆಗೆ 1 ಕೋಟಿ ಕುಟುಂಬಕ್ಕೆ 556 ಕೋಟಿ ಹಣ ಜಮಾ ಮಾಡಲಾಗಿದೆ ಎಂದರು.
Annabhagya amount-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಅಗಸ್ಟ 10 ರಂದು ಅನ್ನಭಾಗ್ಯ ಅಕ್ಕಿ ಮತ್ತು ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
5 ಸದಸ್ಯರಿರುವ ಕುಟುಂಬಕ್ಕೆ 850 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಫೆಬ್ರವರಿ.21ರಂದು ಈ ವಿಷಯವಾಗಿ ಮಾತನಾಡಿದ್ದಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದಿದ್ದರು.
ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದಿದ್ದರು.
ಅದರಂತೆ ಇಂದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ರೂ.4000 ಬಾಕಿ ಹಣವನ್ನು ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ. ಇಂದು ಅನೇಕ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗಿರುವುದಾಗಿ ತಿಳಿದು ಬಂದಿದೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರು, ಈಗಾಗಲೇ ನವೆಂಬರ್ ತಿಂಗಳ ಹಣವನ್ನು ಎಲ್ಲರ ಅಕೌಂಟ್ಗೆ ಹಾಕಿದ್ದೇವೆ. ಡಿಸೆಂಬರ್ ಮತ್ತು ಜನವರಿ ಎರಡು ತಿಂಗಳದ್ದು ಬಾಕಿ ಇದೆ. ಡಿಸೆಂಬರ್ದು ಇವತ್ತು ಬಿಲ್ಲಿಂಗ್ ನಡೀತಾ ಇದೆ. ನಾಲೈದು ದಿನದಲ್ಲಿ ಮಹಿಳೆಯರ ಅಕೌಂಟ್ಗೆ ಹಣ ಜಮಾವಣೆ ಆಗುತ್ತದೆ. ಡಿಸೆಂಬರ್ ಮುಗಿಸಿದ ತಕ್ಷಣ ಜನವರಿ ಮತ್ತು ಫೆಬ್ರವರಿ ತಿಂಗಳದ್ದು ಮತ್ತೆ ತಗೋತೀವಿ. ಆ ಬಳಿಕ ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ಹೇಳಿದರು.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ರಾಜ್ಯದ 8.90 ಲಕ್ಷ ಹಾಲು ಉತ್ಪಾದಕರಿಗೆ ₹288 ಕೋಟಿ ಪ್ರೋತ್ಸಾಹಧನ ನೇರ ಖಾತೆಗೆ ಜಮೆ
Milk incentive status-ಇಲ್ಲಿಯವರೆಗೂ ಜಮಾ ಆಗಿರುವ ಹಾಲಿನ ಪ್ರೋತ್ಸಾಹಧನ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ "ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಪ್ರೋತ್ಸಾಹಧನ ಮಾಹಿತಿ ಸಿಗಲಿದೆ.
ಹೀಗೂ ಚೆಕ್ ಮಾಡಬಹುದು
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/Klda/MilkIncentive?ServiceId=5399&Type=TABLE&DepartmentId=3119
ನಂತರ ನಿಮ್ಮ ಜಿಲ್ಲೆ,ತಾಲೂಕು,Milk Union,ಗ್ರಾಮ, select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ನಿಮ್ಮ ಗ್ರಾಮದಲ್ಲಿ ಯಾರಿಗೆಲ್ಲಾ ಎಷ್ಟು ಹಾಲಿನ ಪ್ರೋತ್ಸಾಹಧನ(Milk incentive) ಬಂದಿದೆ ಎಂದು ತಿಳಿಯಲಿದೆ
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>
2024-25ನೇ ಸಾಲಿನಲ್ಲಿ 21.78 ಲಕ್ಷ ರೈತರಿಗೆ 18,960 ಕೋಟಿ ರೂ. ಕೃಷಿ ಸಾಲ(crop loan) ವಿತರಿಸಲಾಗಿದೆ. ರಿಯಾಯತಿ ಬಡ್ಡಿ ದರದಲ್ಲಿ ನೀಡುವ ಪುನರ್ಧನದ ಮಿತಿಯನ್ನು ನಬಾರ್ಡ್ ಶೇ.58ರಷ್ಟು ಕಡಿಮೆ ಮಾಡಿದ್ದರೂ ಸಹ, ನಿಗದಿತ ಗುರಿಯನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ. ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲವನ್ನು(Bele sala) ವಿತರಿಸುವ ಗುರಿಯನ್ನು ಹೊಂದಲಾಗಿದೆ.
2023-24ನೇ ಸಾಲಿನ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದಂತೆ, ಡಿಸಿಸಿ (DCC) ಹಾಗೂ ಪಿಕಾರ್ಡ್ (PCARD) ಬ್ಯಾಂಕುಗಳಿಗೆ ಸಂಬಂಧಿಸಿದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ 240 ಕೋಟಿ ರೂ. ಬಡ್ಡಿಯನ್ನು ಮನ್ನಾ (Bele sala baddi manna)ಮಾಡಲಾಗಿದೆ.
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list
ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.
ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.
ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ
ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ/farmer" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು/Submit" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ(e-status) ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ(DBT status) ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ಸೂಚನೆ-ಜಿಲ್ಲೆ select ಮಾಡುವಾಗ ತಪ್ಪಾಗಿ ಬೇರೆ ಜಿಲ್ಲೆ select ಮಾಡಿದರೆ ಈ ಕೆಳಗಿನಂತೆ No data found ಎಂದು ತೋರಿಸುತ್ತದೆ. ಅದಕ್ಕಾಗಿ ಸರಿಯಾದ ಜಿಲ್ಲೆಯನ್ನು select ಮಾಡಿ)
ನಂತರ ನೇರ ನಗದು ವರ್ಗಾವಣೆ ಸ್ಥಿತಿ (Status of DBT) ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್(Ration card number) ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ (Annabhagya amount)ಮೊತ್ತವನ್ನು ತೋರಿಸುತ್ತದೆ
ಹೀಗೂ ಚೆಕ್ ಮಾಡಬಹುದು
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಅನ್ನಭಾಗ್ಯ(Annabhagya scheme)ಮೇಲೆ ಕ್ಲಿಕ್ ಮಾಡಿ
ನಂತರ ಇಲ್ಲಿಯವರೆಗೂ ಜಮಾ ಆದ ಅನ್ನಭಾಗ್ಯ ಹಣ(Annabhagya amount)ಮಾಹಿತಿ ಸಿಗಲಿದೆ.
2024-25ನೇ ಸಾಲಿನಲ್ಲಿ 21.78 ಲಕ್ಷ ರೈತರಿಗೆ 18,960 ಕೋಟಿ ರೂ. ಕೃಷಿ ಸಾಲ(crop loan) ವಿತರಿಸಲಾಗಿದೆ. ರಿಯಾಯತಿ ಬಡ್ಡಿ ದರದಲ್ಲಿ ನೀಡುವ ಪುನರ್ಧನದ ಮಿತಿಯನ್ನು ನಬಾರ್ಡ್ ಶೇ.58ರಷ್ಟು ಕಡಿಮೆ ಮಾಡಿದ್ದರೂ ಸಹ, ನಿಗದಿತ ಗುರಿಯನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ. ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲವನ್ನು(Bele sala) ವಿತರಿಸುವ ಗುರಿಯನ್ನು ಹೊಂದಲಾಗಿದೆ.
2023-24ನೇ ಸಾಲಿನ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದಂತೆ, ಡಿಸಿಸಿ (DCC) ಹಾಗೂ ಪಿಕಾರ್ಡ್ (PCARD) ಬ್ಯಾಂಕುಗಳಿಗೆ ಸಂಬಂಧಿಸಿದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ 240 ಕೋಟಿ ರೂ. ಬಡ್ಡಿಯನ್ನು ಮನ್ನಾ (Baddi manna)ಮಾಡಲಾಗಿದೆ.
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list
ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.
ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.
ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ
ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ/farmer" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು/Submit" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ "ಅನುಗ್ರಹ" ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂ. ಗಳಿಂದ 15,000 ರೂ. ಗಳಿಗೆ; ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 5,000 ರೂ. ಗಳಿಂದ 7,500 ರೂ. ಗಳಿಗೆ ಹಾಗೂ 3-6 ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 3,500 ರೂ.ಗಳಿಂದ 5,000 ರೂ.ಗಳಿಗೆ ಹೆಚ್ಚಿಸಲಾಗುವುದು.
ಕೃಷಿ ಮತ್ತು ಹೈನುಗಾರಿಕೆ ಒಂದನ್ನೊಂದು ಅವಲಂಬಿಸಿಕೊಂಡಿವೆ. ಬರದಿಂದಾಗಿ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿರುವುದರಿಂದ ಸಹಜವಾಗಿಯೇ ಇದು ಹೈನುಗಾರಿಕೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ.
ಹೈನುಗಾರ ಕುಟುಂಬಗಳನ್ನು ಈ ಸಂಕಷ್ಟದಿಂದ ಪಾರುಮಾಡುವ ಉದ್ದೇಶದಿಂದ ಕುರಿ, ಮೇಕೆ, ಹಸು ಮುಂತಾದ ಜಾನುವಾರುಗಳು ಆಕಸ್ಮಿಕ ಮರಣಕ್ಕೆ ತುತ್ತಾದರೆ ಅದರ ಮಾಲೀಕರಿಗೆ ಆರ್ಥಿಕ ಪರಿಹಾರ ನೀಡುವ ಅನುಗ್ರಹ ಯೋಜನೆಗೆ ಮರುಚಾಲನೆ ನೀಡಲಾಗಿದೆ, ಹಾಲಿಗೆ ನೀಡುವ ಪ್ರೋತ್ಸಾಹಧನದಿಂದ 24 ಲಕ್ಷ ಹೈನುಗಾರರಿಗೆ ಅನುಕೂಲವಾಗಿದೆ, ಸಾಕುಪ್ರಾಣಿಗಳನ್ನು ಬಾಧಿಸುವ ವಿವಿಧ ಮಾರಕ ರೋಗಗಳನ್ನು ತಡೆಗಟ್ಟಲು 2.6 ಕೋಟಿಗೂ ಅಧಿಕ ಲಸಿಕೆ ಹಾಕಲಾಗಿದೆ. ಹೀಗೆ ನಾಡಿನ ಹೈನುಗಾರರ ರಕ್ಷಣೆಗೆ ನಮ್ಮ ಸರ್ಕಾರ ಕಂಕಣಬದ್ಧವಾಗಿ ಶ್ರಮಿಸುತ್ತಿದೆ ಎಂದು ತಿಳಿಸಿದ್ದಾರೆ.
]]>
ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್ಕ್ಯೂಬೇಷನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.
ಪಿಎಂಎಫ್ಎಮ್ ಇ ಯೋಜನೆಯಡಿ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಅರ್ಜಿ ಆಹ್ವಾನ-pmfme subsidy scheme
2025-26ರ ರಾಜ್ಯ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ರೈತರಿಗೆ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ. ಕೃಷಿ ಇಲಾಖೆಗೆ ಹೆಚ್ಚಿನ ಮಹತ್ವ ನೀಡುವುದರ ಜೊತೆಗೆ ಈ ಎರಡು ಬ್ಯಾಂಕ್ಗಳಲ್ಲಿ ರೈತರು ಸಾಲ ಮಾಡಿದ್ರೆ ಬಡ್ಡಿ ಮನ್ನಾ ಮಾಡಲಾಗಿದೆ.
2025-26ರ ದಾಖಲೆಯ ಬಂಜೆಟ್ (State Budget0 ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ರೈತರಿಗೆ ಬಂಪರ್ ಗಿಫ್ಟ್ (Special Gift to Farmers) ಕೊಟ್ಟಿದ್ದಾರೆ. ಈ ಬಜೆಟ್ನಲ್ಲಿ ಕೃಷಿ ಇಲಾಖೆಗೆ ಹೆಚ್ಚಿನ ಮಹತ್ವ ನೀಡಿರುವ ‘ರೈತ’ರಾಮಯ್ಯ ರೈತರ ಸಾಲದ (Loan) ಬಡ್ಡಿ ಮನ್ನಾ (Interest waived) ಮಾಡುವಂತೆ ಘೋಷಿಸಿದ್ದಾರೆ. ಈ ಎರಡು ಬ್ಯಾಂಕ್ಗಳಲ್ಲಿ ರೈತರು ಸಾಲ ಮಾಡಿದ್ದರೆ, ಅವರ ಬಡ್ಡಿ ಮನ್ನಾ ಆಗಲಿದೆ.
ಡಿಸಿಸಿ (DCC), ಪಿಕಾರ್ಡ್ ಬ್ಯಾಂಕ್ಗಳಲ್ಲಿ (Picard Bank) ಸಾಲ ಮಾಡಿರುವ ರೈತರು ಈಗ ಬಡ್ಡಿ ಕಟ್ಟುವ ಹಾಗಿಲ್ಲ. ಈ ಎರಡು ಬ್ಯಾಂಕ್ಗಳಲ್ಲಿ ರೈತರ ಸಾಲದ ಬಡ್ಡಿ ಮನ್ನಾ ಮಾಡಲಾಗಿದೆ. 2 ಬ್ಯಾಂಕ್ಗಳಲ್ಲಿ ರೈತರ ಸಾಲದ ಬರೋಬ್ಬರಿ ₹240 ಕೋಟಿ ಬಡ್ಡಿ ಮನ್ನಾ ಮಾಡಲಾಗಿದೆ. ಜೊತೆಗೆ 37 ಲಕ್ಷ ರೈತರಿಗೆ ಸಾಲಕ್ಕಾಗಿ ₹28,000 ಕೋಟಿ ಘೋಷಿಸಲಾಗಿದೆ.
Bele sala baddi manna-ಈ ಯೋಜನೆಯಡಿ ಸಿಗಲಿದೆ ನಿಮ್ಮ ಸಾಲದ ಮೇಲೆ 3% ಬಡ್ಡಿ ಮನ್ನಾ,ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ಕೇಂದ್ರ ವಲಯದ ಯೋಜನೆ ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಸರ್ಕಾರವು ಹಣಕಾಸು ಸೌಲಭ್ಯಗಳನ್ನು ಒದಗಿಸುತ್ತಿದ್ದು, ರೂ. 2 ಕೋಟಿ ಸಾಲದ ಮೊತ್ತಕ್ಕೆ ವಾರ್ಷಿಕ ಶೇ. 3ರಂತೆ 7 ವರ್ಷದ ಅವಧಿಗೆ ಬಡ್ಡಿ ಸಹಾಯಧನ ಲಭ್ಯವಿರುತ್ತದೆ.
ಅರ್ಹ ಕೃಷಿ ಚಟುವಟಿಕೆಗಳು/ಯೋಜನೆಗಳು ಈ ಕೆಳಗಿನಂತಿವೆ
ಇ-ಮಾರುಕಟ್ಟೆ ವೇದಿಕೆ ಸೇರಿದಂತೆ ಸರಬರಾಜು ಸರಪಳಿ ಸೇವೆಗಳು ಗೋದಾಮುಗಳು ಮತ್ತು ಸೈಲೊಗಳು + ಪ್ಯಾಕ್ ಹೌಸ್ಗಳು ವಿಂಗಡಣೆ ಮತ್ತು ಶ್ರೇಣೀಕರಣ ಘಟಕಗಳು ಶೀತಲಗೃಹ ಸರಪಳಿಗಳು ಸಾಗಾಣಿಕೆ ಸೌಲಭ್ಯಗಳು ಪ್ರಾಥಮಿಕ ಸಂಸ್ಕರಣಾ ಕೇಂದ್ರಗಳು ಹಣ್ಣು ಮಾಗಿಸುವ ಘಟಕಗಳು
ಮೌಲ್ಯಮಾಪನ ಘಟಕಗಳು ಸಂಕುಚಿತ ಜೈವಿಕ ಅನಿಲ (CBG) ಸ್ಥಾವರ + ಸಾವಯವ ಪರಿಕರ ಉತ್ಪಾದನೆ + ಜೈವಿಕ ಉತ್ತೇಜಕ ಉತ್ಪಾದನಾ ಘಟಕಗಳು * ಸಸ್ಯ ನರ್ಸರಿ /ಅಂಗಾಂಶ ಕೃಷಿ ಬೀಜ ಸಂಸ್ಕರಣೆ + ಕೃಷಿ ಯಂತ್ರಧಾರೆ ಕೇಂದ್ರಗಳು ಸ್ಮಾರ್ಟ್ ಮತ್ತು ನಿಖರವಾದ ಕೃಷಿ ಸಂಯೋಜಿತ ಸ್ಪಿರುಲಿನಾ ಉತ್ಪಾದನೆ ಮತ್ತು ಸಂಸ್ಕರಣಾ ಘಟಕಗಳು ರೇಷ್ಮೆ ಕೃಷಿ ಸಂಸ್ಕರಣಾ ಘಟಕ • ಜೇನು ಸಂಸ್ಕರಣಾ ಘಟಕ ಪ್ಲಾಂಟ್ ಕ್ಯಾರಂಟೈನ್ ಘಟಕಗಳು ಮತ್ತು ಸಾಮೂಹಿಕ ಕೃಷಿ ಅಡಿ: ಜಲಕೃಷಿ, ವಾಯುಕೃಷಿ, ಹಸಿರುಮನೆ, ಬಹುಮಹಡಿ ಕೃಷಿ, ಅಣಬೆ ಬೇಸಾಯ
ಅರ್ಹ ಫಲಾನುಭವಿಗಳು
ರೈತರು/ ರೈತ ಉತ್ಪಾದಕ ಸಂಸ್ಥೆಗಳು, ಪ್ರಾಂತೀಯ ಸಹಕಾರ ಒಕ್ಕೂಟಗಳು ಕೃಷಿ ಉದ್ಯಮಿಗಳು / ನವೋದ್ಯಮಿಗಳು ಪ್ರಾಥಮಿಕ ಕೃಷಿ ಕ್ರೆಡಿಟ್ ಸಹಕಾರ ಸಂಘಗಳು + ವಿವಿಧೋದ್ದೇಶ ಸಹಕಾರ ಸಂಘಗಳು * ಸ್ವ-ಸಹಾಯ ಗುಂಪುಗಳು / ಜಂಟಿ ಬಾಧ್ಯತಾ ಗುಂಪುಗಳು / ಖಾಸಗಿ ಮಾಲೀಕತ್ವ ಸಂಸ್ಥೆಗಳು.
ಯೋಜನೆಯಲ್ಲಿ ಭಾಗವಹಿಸುವ ಹಣಕಾಸು ಸಂಸ್ಥೆಗಳು:
ರಾಷ್ಟ್ರೀಕೃತ ಬ್ಯಾಂಕುಗಳು + ಶೆಡ್ಯೂಲ್ಡ್ ಸಹಕಾರಿ ಬ್ಯಾಂಕ್ ಗಳು + ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು ಸಣ್ಣ ಹಣಕಾಸು ಬ್ಯಾಂಕುಗಳು + ಬ್ಯಾಂಕೇತರ ಹಣಕಾಸು ಸಂಸ್ಥೆಗಳು + ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (ಎನ್ ಸಿಡಿಸಿ).
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
CPMU, ಕೃಷಿ ಮತ್ತು ರೈ ಕಲ್ಯಾಣ ಮಂತ್ರಾಲಯದ ಮೂಲಕ ಪರಿಶೀಲಿಸಲಾದ ಅರ್ಜಿಯನ್ನು ಬ್ಯಾಂಕ್ ಶಾಖೆಗೆ ಆನ್ ಲೈನ್ ನಲ್ಲಿ ವರ್ಗಾಯಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕೃಷಿ/ತೋಟಗಾರಿಕೆ ಇಲಾಖೆ, ಜಿಲ್ಲಾ ನಬಾರ್ಡ್ ವ್ಯವಸ್ಥಾಪಕರು, ನಿಮ್ಮ ವ್ಯಾಪ್ತಿಯ ಬ್ಯಾಂಕ್/ ಹಣಕಾಸು ಸಂಸ್ಥೆಗಳನ್ನು ಸಂಪರ್ಕಿಸಬಹುದು.
]]>2025-26ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡಿದರು, ಹಾಗಾದ್ರೆ ಸಿಎಂ ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡಿದ ಇಂದಿನ ಬಜೆಟ್ನ ಹೈಲೆಟ್ಸ್ ಹೀಗಿದೆ.
ಕೃಷಿ
28. ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು, ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಪ್ರಸಕ್ತ ಸಾಲಿನಲ್ಲಿ, ಈ ಯೋಜನೆಯಡಿ 10 ಹವಾಮಾನ ವಲಯಗಳಲ್ಲಿ ಕೃಷಿ ಇಲಾಖೆಯ ಅಧೀನದ ಕ್ಷೇತ್ರಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳನ್ನು ಅಭಿವೃದ್ಧಿಪಡಿಸಿ, ಈ ಪದ್ಧತಿಯನ್ನು ಅಳವಡಿಸಿಕೊಳ್ಳಲು ರೈತರಿಗೆ ಪ್ರಚುರಪಡಿಸಲಾಗುವುದು.
29. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ. ಅನುದಾನ ಕಲ್ಪಿಸಲಾಗುವುದು.
30. ಕೃಷಿ ಬೆಳೆಗಳಲ್ಲಿ ನೀರನ್ನು ಸಮರ್ಥ ಬಳಕೆ ಮಾಡಿ, ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ. ಸಹಾಯಧನವನ್ನು ಒದಗಿಸಲಾಗುವುದು.
31. ತೊಗರಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಅಳವಡಿಕೆ,
ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸುವುದರ ಮೂಲಕ ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸಲು ಉದ್ದೇಶಿಸಿದೆ. ಈ ಮೂಲಕ ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು
88 ಕೋಟಿ ರೂ. ಒದಗಿಸಲಾಗುವುದು.
32. ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್ಕ್ಯೂಬೇಷನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.
33. ಕೃಷಿ ಭಾಗ್ಯ ಯೋಜನೆಯಡಿ ಮೂರು ಲಕ್ಷಕ್ಕಿಂತ ಅಧಿಕ
ಕೃಷಿ ಹೊಂಡಗಳನ್ನು ನಿರ್ಮಿಸಿ ಮಳೆಯಾಶ್ರಿತ ಕೃಷಿ ಪ್ರದೇಶದ ಬೆಳೆಗಳಿಗೆ ರಕ್ಷಣಾತ್ಮಕ ನೀರಾವರಿ ಒದಗಿಸುವುದರೊಂದಿಗೆ ರೈತರ ಬೆಳೆಗಳ ಉತ್ಪಾದಕತೆ ಹಾಗೂ ಆದಾಯವನ್ನು ಹೆಚ್ಚಿಸಲಾಗಿದೆ.
ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 12,000
ಕೃಷಿ ಹೊಂಡಗಳನ್ನು ನಿರ್ಮಿಸಲಾಗುವುದು.
34. ಜಾಗತಿಕ ಮಟ್ಟದಲ್ಲಿ ಡಿಜಿಟಲ್, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರದಲ್ಲಿ ಆಗುತ್ತಿರುವ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ, ಡಿಜಿಟಲ್ ಕೃಷಿ ಸೇವೆಗಳ ಕೇಂದ್ರವನ್ನು ಸ್ಥಾಪಿಸಲಾಗುವುದು. ಈ ಕೇಂದ್ರವು ರೈತರಿಗೆ ಮತ್ತು ನೀತಿ ನಿರೂಪಕರಿಗೆ ಬೆಳೆಗಳ ಕುರಿತು ನಿಖರವಾದ ತೀರ್ಮಾನವನ್ನು ಕೈಗೊಂಡು ಬೆಳೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ.
35. ರಾಜ್ಯದಲ್ಲಿ ಚಾಲ್ತಿಯಿರುವ ಹವಾಮಾನ ವಲಯಗಳ ವರ್ಗೀಕರಣ ಬಹಳ ವರ್ಷಗಳ ಹಿಂದೆ ಗುರುತಿಸಲಾಗಿರುವುದರಿಂದ ಹಾಗೂ ಇತ್ತೀಚಿನ ವರ್ಷಗಳ ನೈಸರ್ಗಿಕ ವೈಪರೀತ್ಯಗಳ ಬದಲಾವಣೆಯಿಂದ ಹವಾಮಾನ ವಲಯಗಳನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿಯನ್ನು ರಚಿಸಲಾಗುವುದು.
36. ಕರ್ನಾಟಕ ರಾಜ್ಯದ ಸಾಗುವಳಿ ಪ್ರದೇಶದ ಶೇ.64ರಷ್ಟು ಪ್ರದೇಶವು ಮಳೆಯಾಶ್ರಿತ ಪ್ರದೇಶವಾಗಿದ್ದು, ಮಳೆಯಾಶ್ರಿತ ಕೃಷಿಯನ್ನು ಜೀವನಾಧಾರವಾಗಿಸಿ ಸುಸ್ಥಿರವನ್ನಾಗಿಸಲು ಹಾಗೂ ರೈತರ ಜೀವನೋಪಾಯವನ್ನು ಸುಧಾರಿಸಲು ʻಸಮಗ್ರ ಮಳೆಯಾಶ್ರಿತ ಕೃಷಿ ನೀತಿʼಯನ್ನು ಅನುಷ್ಠಾನಕ್ಕೆ ತರಲಾಗುವುದು.
37. ರೈತರಿಗೆ ಮಣ್ಣು ಪರೀಕ್ಷೆ ಹಾಗೂ ಅವರು ಬಳಸುವ ಪರಿಕರಗಳಾದ ರಸಗೊಬ್ಬರ, ಬಿತ್ತನೆ ಬೀಜ, ಸಸ್ಯ ಸಂರಕ್ಷಣಾ ಔಷಧಿ, ಜೈವಿಕ ಗೊಬ್ಬರ ಇತ್ಯಾದಿಗಳ ಗುಣಮಟ್ಟವನ್ನು ಪರೀಕ್ಷಿಸಲು ಇಲಾಖೆಯಡಿ ಇರುವ 58 ಪ್ರಯೋಗಾಲಯಗಳನ್ನು ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಬಲವರ್ಧನೆಗೊಳಿಸಲಾಗುವುದು.
38. ಸುಸ್ಥಿರ ಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸಿ, ರೈತರ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಸಾವಯವ ಪ್ರಮಾಣೀಕರಣ ವ್ಯವಸ್ಥೆ ಕಲ್ಪಿಸಲಾಗುವುದು.
39. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಟ್ಟಾರೆ 3,000 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆಯನ್ನು ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಜಾರಿಗೊಳಿಸಲಾಗುವುದು.
40. ಜೈವಿಕ ಕೃಷಿ ಪರಿಕರ ಸ್ಟಾರ್ಟ್-ಅಪ್ಗಳು (Agri Start-up) ಉತ್ಪಾದಿಸುವ ಜೈವಿಕ ಪರಿಕರಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸೂಕ್ತ ದರದಲ್ಲಿ ಮಾರಾಟ ಮಾಡಲು ಉತ್ತೇಜಿಸಲಾಗುವುದು.
41. ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆಯಡಿ ಈವರೆಗೆ ಒಟ್ಟಾರೆ 12.90 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭೂ-ಸಂಪನ್ಮೂಲ ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಭೂ-ಸಂಪನ್ಮೂಲ ಸಮೀಕ್ಷೆ ಆಧಾರದ ಮೇಲೆ ರೈತರು ಸೂಕ್ತವಾದ ಬೆಳೆಗಳನ್ನು ಬೆಳೆಯಲು, ಅಗತ್ಯವಿರುವ ರಾಸಾಯನಿಕ ಗೊಬ್ಬರ ಹಾಗೂ ಪೋಷಕಾಂಶಗಳನ್ನು ಬಳಸಿ ಬೆಳೆಗಳ ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹಿಸಲಾಗುವುದು.
42. ಮಂಡ್ಯ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಈಗಾಗಲೇ ಅನುಮೋದನೆ ನೀಡಿದ್ದು, ಮೂಲಸೌಕರ್ಯ ಕಲ್ಪಿಸಲು
೨೫ ಕೋಟಿ ರೂ. ಒದಗಿಸಿ, ಪ್ರಸಕ್ತ ಸಾಲಿನಲ್ಲಿ ತರಗತಿಗಳನ್ನು ಆರಂಭಿಸಲಾಗುವುದು.
43. ಬರ ಮತ್ತು ರೋಗ ನಿರೋಧಕ ಲಕ್ಷಣಗಳ ಸಂಶೋಧನೆ ಕೈಗೊಂಡು ಬೆಳೆಗಳ ಉತ್ತಮ ತಳಿ ಅಭಿವೃದ್ಧಿಪಡಿಸಲು ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್ (Phenotyping) ಸೌಲಭ್ಯ ಕಲ್ಪಿಸಲಾಗುವುದು.
44. ಸಾವಯವ ಉತ್ಪನ್ನಗಳು ಮತ್ತು ಸಿರಿಧಾನ್ಯಗಳ ಬೇಡಿಕೆ ಮತ್ತು ಪೂರೈಕೆಗಳ ಅಂತರವನ್ನು ಸರಿದೂಗಿಸಲು ಹಾಗೂ ರೈತರಿಗೆ ಸೂಕ್ತ ಮಾರುಕಟ್ಟೆಯನ್ನು ಕಲ್ಪಿಸುವ ಉದ್ದೇಶದಿಂದ 20 ಕೋಟಿ ರೂ. ಮೊತ್ತದಲ್ಲಿ ʻಸಾವಯವ ಮತ್ತು ಸಿರಿಧಾನ್ಯಗಳ ಹಬ್ʼ ಅನ್ನು ಸ್ಥಾಪಿಸಲಾಗುವುದು.
45. ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು.
46. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಹೊಸ ಕೃಷಿ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲಾಗುವುದು.
ತೋಟಗಾರಿಕೆ
47. ರೈತರಿಗೆ ಹೆಚ್ಚಿನ ಆದಾಯ ಒದಗಿಸುವಲ್ಲಿ ತೋಟಗಾರಿಕಾ ಬೆಳೆಗಳ ಕೊಡುಗೆ ಮಹತ್ವದ್ದಾಗಿದೆ. ಇತ್ತೀಚಿನ ಬೆಳೆ ಪದ್ಧತಿ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ ತಂತ್ರಜ್ಞಾನದಲ್ಲಾದ ಆಧುನೀಕರಣದ ಅನುಕೂಲವನ್ನು ಬೆಳೆಗಾರರಿಗೆ ತಲುಪಿಸುವ ಉದ್ದೇಶದಿಂದ ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಅನ್ನು ಜಾರಿಗೊಳಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ 95 ಕೋಟಿ ರೂ. ಅನುದಾನ ಒದಗಿಸಿದೆ.
48. ತೋಟಗಾರಿಕಾ ಬೆಳೆಗಳ ವಿಸ್ತೀರ್ಣ, ಉತ್ಪಾದನೆ, ಬೆಳೆಗಳ ಆರೋಗ್ಯ, ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ನೈಜ ಸಮಯದ (Real Time) ಆಧಾರದ ಮೇಲೆ ರೈತರಿಗೆ ಮಾಹಿತಿ ಒದಗಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಪೇಸ್ ಸೈನ್ಸ್ ಟೆಕ್ನಾಲಜಿ ಮತ್ತು ಖಾಸಗಿ ಸಹಯೋಗದಲ್ಲಿ ಜ್ಞಾನ ಕೋಶ ಸ್ಥಾಪಿಸಲಾಗುವುದು.
49. ರಾಜ್ಯದ 20 GI ಟ್ಯಾಗ್ ಹೊಂದಿರುವ ಬೆಳೆಗಳು ಹಾಗೂ ಇತರೆ ದೇಸಿ ತಳಿಗಳು ಕಣ್ಮರೆಯಾಗಿ ನಶಿಸಿ ಹೋಗುವುದನ್ನು ತಪ್ಪಿಸಲು ದೇಶಿ ತಳಿಗಳ ಬೀಜ ಬ್ಯಾಂಕ್ ಸ್ಥಾಪಿಸಲಾಗುವುದು.
50. ಬ್ಯಾಡಗಿ ಮೆಣಸಿನಕಾಯಿ ತಳಿಯ ಸಂರಕ್ಷಣೆ ಮತ್ತು ಎಲೆ ಮುಟುರು ರೋಗ, ತ್ರಿಪ್ಸ್ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ಕೈಗೊಳ್ಳಲಾಗುವುದು.
51. ತೋಟಗಾರಿಕೆ ಇಲಾಖೆಯ ಅಧೀನದ ಆಯ್ದ ಕ್ಷೇತ್ರಗಳು ಮತ್ತು ನರ್ಸರಿಗಳಡಿ ಸಾರ್ವಜನಿಕ-ಖಾಸಗಿ ಸಹಯೋಗದೊಂದಿಗೆ
ಹೂ-ಕೃಷಿ, ಅಲಂಕಾರಿಕ ಸಸ್ಯಗಳು, ಔಷಧೀಯ ಸಸ್ಯಗಳನ್ನು ಬೆಳೆಸಲು ಹಾಗೂ ತೋಟಗಾರಿಕಾ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಾರ್ಯಕ್ರಮವನ್ನು ರೂಪಿಸಲಾಗುವುದು.
52. ಗದಗ ಜಿಲ್ಲೆಯ ಡಂಬಳದಲ್ಲಿ ತೋಟಗಾರಿಕಾ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲಾಗುವುದು.
53. ತೋಟಗಾರಿಕಾ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು 52,000 ಫಲಾನುಭವಿಗಳಿಗೆ 426 ಕೋಟಿ
ರೂ. ಸಹಾಯ ಧನವನ್ನು ಒದಗಿಸಲಾಗುವುದು.
54. ಮಲೆನಾಡು ಜಿಲ್ಲೆಗಳಲ್ಲಿ ಎಲೆ ಚುಕ್ಕೆ ರೋಗದ ಬಾಧೆಗೆ ತುತ್ತಾಗಿ 2 ಲಕ್ಷಕ್ಕಿಂತ ಅಧಿಕ ಅಡಿಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ.ಈ ರೋಗ ನಿಯಂತ್ರಿಸಲು ಸಸ್ಯ ಸಂರಕ್ಷಣಾ ಕ್ರಮಗಳಿಗಾಗಿ 62 ಕೋಟಿ ರೂ. ಒದಗಿಸಲಾಗಿದೆ.
55. ತೆಂಗು ಬೆಳೆಯುವ ಪ್ರದೇಶಗಳಲ್ಲಿ ಕಪ್ಪು ತಲೆ ಹುಳುವಿನ ಬಾಧೆಯ ಕುರಿತು ವೈಜ್ಞಾನಿಕ ಸಮೀಕ್ಷೆ ನಡೆಸಿ, ಇದರ ಆಧಾರದ ಮೇಲೆ ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಲಾಗುವುದು.
ರೇಷ್ಮೆ
56. ಅಂತಾರಾಷ್ಟ್ರೀಯ ದರ್ಜೆಯ ದ್ವಿತಳಿ ಕಚ್ಚಾ ರೇಷ್ಮೆಯ ದೇಶೀಯ ಬೇಡಿಕೆಯನ್ನು ಪೂರೈಸಲು ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್ ಘಟಕಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸಲಾಗುವುದು.
57. ರಾಮನಗರ ಮತ್ತು ಶಿಡ್ಲಘಟ್ಟ ಹೈ-ಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯ ಮೊದಲನೇ ಹಂತದ ಕಾಮಗಾರಿಗಳು ಮುಕ್ತಾಯಗೊಳ್ಳಲಿದ್ದು, ಪ್ರಸಕ್ತ ಸಾಲಿನಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು 250 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.
58. ಮೈಸೂರು ಮತ್ತು ಸುತ್ತಮುತ್ತಲಿನ ಭಾಗದ ರೇಷ್ಮೆ
ಬೆಳೆಗಾರರಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ
ರೇಷ್ಮೆಗೂಡಿನ ಮಾರುಕಟ್ಟೆಯನ್ನು NABARD ಸಹಯೋಗದಲ್ಲಿ ಸ್ಥಾಪಿಸಲಾಗುವುದು.
59. ರೈತರು ಉತ್ಪಾದಿಸುವ ರೇಷ್ಮೆಗೂಡುಗಳಿಗೆ ಸೂಕ್ತ ಬೆಲೆ ದೊರಕಿಸಲು ಹಾಗೂ ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟವನ್ನು ಸಾಧಿಸುವ ದೃಷ್ಟಿಯಿಂದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗಳಲ್ಲಿ ಗುಣಮಟ್ಟ ಪರೀಕ್ಷೆ ಮತ್ತು ಶ್ರೇಣೀಕರಣದ ಕಾರ್ಯಕ್ಕಾಗಿ Assayer ಗಳನ್ನು ನಿಯೋಜಿಸಲಾಗುವುದು.
60. ರಾಜ್ಯದಲ್ಲಿ ರೇಷ್ಮೆ ಬೆಳೆ ವಿಸ್ತರಿಸಲು ರೇಷ್ಮೆ ಗೂಡಿನ ಪೂರ್ವ ಮತ್ತು ನಂತರದ ಚಟುವಟಿಕೆಗಳಿಗೆ ಪ್ರೋತ್ಸಾಹಿಸಲು ರೇಷ್ಮೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 55 ಕೋಟಿ ರೂ. ಅನುದಾನ ಒದಗಿಸಲಾಗುವುದು.
ಪಶುಸಂಗೋಪನೆ
61. ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ "ಅನುಗ್ರಹ" ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂ. ಗಳಿಂದ 15,000 ರೂ. ಗಳಿಗೆ; ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 5,000 ರೂ. ಗಳಿಂದ 7,500 ರೂ. ಗಳಿಗೆ ಹಾಗೂ 3-6 ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 3,500 ರೂ.ಗಳಿಂದ 5,000 ರೂ.ಗಳಿಗೆ ಹೆಚ್ಚಿಸಲಾಗುವುದು.
62. ಕಳೆದ ಎರಡು ವರ್ಷಗಳಲ್ಲಿ 60 ಹೊಸ ಪಶು ಚಿಕಿತ್ಸಾಲಯಗಳನ್ನು ಕಾರ್ಯಾರಂಭಗೊಳಿಸಲಾಗಿದ್ದು, 2025-26ನೇ ಸಾಲಿನಲ್ಲಿ 50 ನೂತನ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗುವುದು.
63. 2025-26ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳನ್ನು ನಬಾರ್ಡ್ ಸಹಯೋಗದೊಂದಿಗೆ ನಿರ್ಮಿಸಲಾಗುವುದು.
64. ಅಮೃತ್ ಮಹಲ್ ಕಾವಲುಗಳಲ್ಲಿನ ಭೂ ಒತ್ತುವರಿ ತಡೆಯಲು ಹಾಗೂ ಅಮೃತ್ ಮಹಲ್ ರಾಸುಗಳಿಗೆ ಮೇವು ಲಭ್ಯವಾಗುವಂತೆ ಮಾಡಲು, ಅರಣ್ಯ ಇಲಾಖೆ ಹಾಗೂ ನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿಗೊಳಿಸಲಾಗುವುದು.
65. ರಾಜ್ಯದ ಹೆಮ್ಮೆಯ ದೇಶಿ ದನದ ತಳಿಗಳಾದ ಹಳ್ಳಿಕಾರ್, ಕಿಲಾರಿ, ಅಮೃತ್ ಮಹಲ್ ಹಾಗೂ ಬಂಡೂರು ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸಲಾಗುವುದು.
66. ಆಧುನಿಕ ಕುರಿ ಸಾಕಾಣಿಕೆ ಪದ್ಧತಿಗಳು ಮತ್ತು ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಲಸೆ ಕುರಿಗಾರರಿಗೆ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ತರಬೇತಿ ನೀಡಲಾಗುವುದು.
67. ನಮ್ಮ ಸರ್ಕಾರವು ಅಸ್ತಿತ್ವಕ್ಕೆ ಬಂದ ನಂತರ "ನಂದಿನಿ" ಬ್ರ್ಯಾಂಡ್ನ ಮಾರುಕಟ್ಟೆಯನ್ನು ವಿಸ್ತರಿಸಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದೆ. 2024-25ನೇ ಸಾಲಿನಲ್ಲಿ ಪ್ರತಿ ಒಂದು ಕೋಟಿಗೂ ಹೆಚ್ಚು ಲೀಟರ್ ಹಾಲನ್ನು ಶೇಖರಿಸಲಾಗಿದೆ.
ಮೀನುಗಾರಿಕೆ
68. ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು.
69. ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜಿಗೆ ಪ್ರಸ್ತುತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲವನ್ನು ದ್ವಿಗುಣಗೊಳಿಸಲಾಗುವುದು.
70. ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲು
30 ಕೋಟಿ ರೂ. ಒದಗಿಸಲಾಗುವುದು.
71. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು.
72. ರಾಜ್ಯದಲ್ಲಿ ನೋಂದಣಿಯಾಗಿರುವ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್ಗಳನ್ನು ಬದಲಾಯಿಸಿ, ಹೊಸ ಇಂಜಿನ್ ಖರೀದಿಸಲು ಶೇ.50 ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ ನೀಡಲಾಗುವುದು.
73. ಪ್ರವಾಸಿಗರಿಗೆ ಶುಚಿ-ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈ-ಟೆಕ್ ಮತ್ಸ್ಯದರ್ಶಿನಿಯನ್ನು ಪ್ರಾರಂಭಿಸಲಾಗುವುದು.
74. ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಹನ ದಟ್ಟಣೆಯನ್ನು ನಿರ್ವಹಿಸಲು "ಮಲ್ಟಿ-ಲೆವೆಲ್ ಪಾರ್ಕಿಂಗ್" ವ್ಯವಸ್ಥೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು.
75. ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರಸ್ತುತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲು ಕ್ರಮವಹಿಸಲಾಗುವುದು.
ಸಹಕಾರ
76. 2024-25ನೇ ಸಾಲಿನಲ್ಲಿ 21.78 ಲಕ್ಷ ರೈತರಿಗೆ 18,960 ಕೋಟಿ ರೂ. ಕೃಷಿ ಸಾಲ ವಿತರಿಸಲಾಗಿದೆ. ರಿಯಾಯತಿ ಬಡ್ಡಿ ದರದಲ್ಲಿ ನೀಡುವ ಪುನರ್ಧನದ ಮಿತಿಯನ್ನು ನಬಾರ್ಡ್ ಶೇ.58ರಷ್ಟು ಕಡಿಮೆ ಮಾಡಿದ್ದರೂ ಸಹ, ನಿಗದಿತ ಗುರಿಯನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ. ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲವನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ.
77. 2023-24ನೇ ಸಾಲಿನ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದಂತೆ, ಡಿಸಿಸಿ (DCC) ಹಾಗೂ ಪಿಕಾರ್ಡ್ (PCARD) ಬ್ಯಾಂಕುಗಳಿಗೆ ಸಂಬಂಧಿಸಿದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ 240 ಕೋಟಿ ರೂ. ಬಡ್ಡಿಯನ್ನು ಮನ್ನಾ ಮಾಡಲಾಗಿದೆ.
78. ಯಶಸ್ವಿನಿ ಯೋಜನೆಯಡಿ ಇಲ್ಲಿಯವರೆಗೆ 700 ನೆಟ್ವರ್ಕ್ ಆಸ್ಪತ್ರೆಗಳು ನೋಂದಣಿಯಾಗಿದ್ದು, ಈ ಆಸ್ಪತ್ರೆಗಳಲ್ಲಿ ಇದುವರೆಗೂ ರಾಜ್ಯಾದ್ಯಂತ 59,000 ಫಲಾನುಭವಿಗಳು 103 ಕೋಟಿ ರೂ. ಮೊತ್ತದ ಚಿಕಿತ್ಸೆ ಪಡೆದಿರುತ್ತಾರೆ.
79. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಕೇಂದ್ರ ಪುರಸ್ಕೃತ ಗಣಕೀಕರಣ ಯೋಜನೆಯಡಿ 93 ಕೋಟಿ ರೂ.ಗಳಷ್ಟು ಬಿಡುಗಡೆ ಮಾಡಿ, ರಾಜ್ಯದಲ್ಲಿ 110 ಸಂಘಗಳ ಗಣಕೀಕರಣವನ್ನು ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ, 3,000 ಸಂಘಗಳನ್ನು ಸಂಪೂರ್ಣವಾಗಿ ಗಣಕೀಕರಣಗೊಳಿಸಲು ಉದ್ದೇಶಿಸಲಾಗಿದೆ.
80. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಪ್ರತಿ ಕ್ವಿಂಟಾಲ್ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ ಪ್ರೋತ್ಸಾಹಧನ 450 ರೂ.ಗಳಂತೆ ಒಟ್ಟು 138 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ. ಇದರಿಂದ, ತೊಗರಿ ಬೆಳೆಯುವ ಪ್ರಮುಖ ಜಿಲ್ಲೆಗಳಾದ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕೋಲಾರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಭಾಗದ ರೈತರಿಗೆ ಅನುಕೂಲವಾಗಲಿದೆ.
81. ಸಹಕಾರ ಇಲಾಖೆಯಲ್ಲಿ ಕಾರ್ಯಕ್ಷಮತೆ, ಪಾರದರ್ಶಕತೆ ಹಾಗೂ ಜನಸ್ನೇಹಿ ಸೇವೆಗಳನ್ನು ನೀಡಲು ಈ ಕೆಳಕಂಡ ಸುಧಾರಣಾ ಕ್ರಮಗಳನ್ನು ಜಾರಿಗೆ ತರಲಾಗುವುದು:
i) ರಾಜ್ಯದ ಎಲ್ಲಾ ನೊಂದಾಯಿತ ಗೃಹ ನಿರ್ಮಾಣ ಸಹಕಾರ ಸಂಘಗಳ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳದ ವತಿಯಿಂದ ಆನ್ಲೈನ್ನಲ್ಲಿ ಅಳವಡಿಸಲಾಗುವುದು.
ii) ಠೇವಣಿದಾರರ ಹಿತಾಸಕ್ತಿಯನ್ನು ಕಾಪಾಡಲು ಹಾಗೂ ಅವ್ಯವಹಾರವನ್ನು ತಡೆಯಲು ಸಹಾಯವಾಣಿಯನ್ನು ಪ್ರಾರಂಭಿಸಲಾಗುವುದು.
iii) ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ವರದಿಗಳನ್ನು ಡಿಜಿಟಲೀಕರಣಗೊಳಿಸಲಾಗುವುದು.
82. ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಪೂರ್ಣಗೊಂಡಿರುವ ಉಗ್ರಾಣಗಳ ನಿರ್ಮಾಣ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಲು 376 ಕೋಟಿ ರೂ. ಸಹಾಯಾನುದಾನವನ್ನು ಹಿಂದಿನ ಆಯವ್ಯಯದಲ್ಲಿ ಘೋಷಿಸಿದ್ದೇನೆ. ಅದರಂತೆ, ಈಗಾಗಲೇ 329 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ, ಬಾಕಿ ಇರುವ
47 ಕೋಟಿ ರೂ. ಮೊತ್ತವನ್ನು ಒದಗಿಸಲಾಗುವುದು.
83. ರಾಜ್ಯದ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಪರವಾನಿಗೆ ಪಡೆದು ಕಾರ್ಯನಿರ್ವಹಿಸುತ್ತಿರುವ ಶ್ರಮಿಕರು ಮೃತರಾದಾಗ ಅವರ ವಾರಸುದಾರರಿಗೆ ಒಂದು ಲಕ್ಷ ರೂ. ವಿಮಾ ಮೊತ್ತವನ್ನು ನೀಡಲಾಗುತ್ತಿದ್ದು, ಸದರಿ ವಿಮಾ ಮೊತ್ತವನ್ನು ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು.
84. ಬೆಂಗಳೂರಿನಲ್ಲಿರುವ ಮಾರುಕಟ್ಟೆ ಸಮಿತಿಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುವುದರಿಂದ ಬೆಂಗಳೂರಿನ ಹೊರವಲಯದಲ್ಲಿ ಹೊಸ Satellite Market ಅನ್ನು ಸ್ಥಾಪಿಸಲಾಗುವುದು.
85. ಕೊಪ್ಪಳ ಜಿಲ್ಲೆಯ ಬೂದುಗುಂಪ ಗ್ರಾಮದಲ್ಲಿ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು KKRDB ವತಿಯಿಂದ 25 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಲಭ್ಯಗಳೊಂದಿಗೆ ಸ್ಥಾಪಿಸಲಾಗುವುದು.
86. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆಯನ್ನು ಉತ್ತೇಜಿಸಲು 10 ಕೋಟಿ ರೂ. ಅನುದಾನವನ್ನು ಪ್ರಥಮ ಹಂತದಲ್ಲಿ ನೀಡಲಾಗುವುದು. ಕಲಬುರಗಿಯಲ್ಲಿ ನೂತನ ಮೆಗಾ ಡೈರಿಯನ್ನು ಪ್ರಾರಂಭಿಸಲು KKRDB ವತಿಯಿಂದ 50 ಕೋಟಿ ರೂ. ಅನುದಾನ ಒದಗಿಸಲಾಗುವುದು.
87. KKRDB ವತಿಯಿಂದ ಕಲಬುರಗಿಯಲ್ಲಿ ಪ್ರಾದೇಶಿಕ ಸಹಕಾರ ಭವನವನ್ನು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದೆ.
88. KKRDB ಸಹಯೋಗದಿಂದ ಗ್ರಾಮೀಣ ಉಗ್ರಾಣಗಳನ್ನು
60 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.
89. ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಅನುವಾಗುವಂತೆ ಬೆಂಗಳೂರಿನಲ್ಲಿ ಸುಸಜ್ಜಿತ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು ಪ್ರಾರಂಭಿಸಲಾಗುವುದು.
90. ಚಿಕ್ಕಬಳ್ಳಾಪುರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಹೈಟೆಕ್ ಹೂವಿನ ಮಾರುಕಟ್ಟೆಯನ್ನು ಹಾಗೂ ಕೆ.ಜಿ.ಎಫ್. ನಲ್ಲಿ ರೈತರ ಆಧುನಿಕ ಮಾರುಕಟ್ಟೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.
Karnataka budget 2025 live link https://content.jwplatform.com/previews/qS7YCgZU
]]>
ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಎಲೆ ಚುಕ್ಕೆ ರೋಗ ಹಾಗೂ ಹಳದಿ ಎಲೆ ರೋಗಗಳಿಂದ ತೊಂದರೆಗೆ ಒಳಗಾದ ರೈತರಿಗೆ ಅದಷ್ಟು ಶೀಘ್ರವಾಗಿ ಪರಿಹಾರ ಧನ ಬಿಡುಗಡೆ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದರು.
ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನಲ್ಲಿ ರೈತರಿಗೆ ಪ್ರತಿ ಹೆಕ್ಟೇರ್ಗೆ ರೂ.
4000/- ಗಳಂತೆ 1.5 ಹೆಕ್ಟೇರ್ ವರೆಗೆ ಪ್ರತಿ ಫಲಾನುಭವಿಗೆ ಗರಿಷ್ಠ ರೂ. 6000/- ಮೊತ್ತದ ಸಸ್ಯ ಸಂರಕ್ಷಣಾ ಔಷಧಿಗಳನ್ನು 6,250 ಹೆಕ್ಟೇರ್ ಪ್ರದೇಶಕ್ಕೆ ವಿತರಿಸಿ ರೂ. 2.50 ಕೋಟಿ ಅನುದಾನವನ್ನು 12,300 ಅಡಿಕೆ ಬೆಳೆಗಾರರಿಗೆ ನೀಡಲಾಗಿರುತ್ತದೆ ಎಂದು ತಿಳಿಸಿದರು.
ಅಡಿಕೆ ಬೆಳೆಗಾರರಿಗೆ ಅಡಿಕೆ ಬೆಳೆಯ ಕಟಾವು ಹಾಗೂ (ದೋಟಿ) ಖರೀದಿಸಲು ಕೃಷಿ ಯಾಂತ್ರೀಕರಣ ಯೋಜನೆಯಡಿ ಸಾಮಾನ್ಯ ವರ್ಗದವರಿಗೆ ಶೇ. 40 ರಷ್ಟು ಹಾಗೂ ಪರಿಶಿಷ್ಟ ಜಾತಿ / ಪಂಗಡದವರಿಗೆ ಶೇ.50 ರಂತೆ ಸಹಾಯಧನ ನೀಡಲಾಗುತ್ತಿದೆ. 2023-24ನೇ ಸಾಲಿನಲ್ಲಿ 1,201 ಫಲಾನುಭವಿಗಳಿಗೆ ರೂ.3.66 ಕೋಟಿ ಸಹಾಯಧನ ನೀಡಲಾಗಿದೆ. ಅಡಿಕೆ ಎಲೆ ಚುಕ್ಕೆ ರೋಗದ ನಿಯಂತ್ರಣ ಕುರಿತು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ತಜ್ಞರ ಸಹಯೋಗದೊಂದಿಗೆ ತರಬೇತಿ ಕಾರ್ಯಗಾರಗಳು ಹಾಗೂ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸುವುದರ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
Bele parihara-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ರಸ್ತೆ ಸಂಪರ್ಕ ಒದಗಿಸುವುದು ನಮ್ಮ ಗುರಿಯಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರ ವಿನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಕುರಿತು ವಿಧಾನಸಭೆಯಲ್ಲಿ ಮಾಹಿತಿ ನೀಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
'ನಮ್ಮ ಗ್ರಾಮ, ನಮ್ಮ ಹೊಲ' ಯೋಜನೆ ಸ್ಥಗಿತವಾಗಿರುವುದರಿಂದ ರೈತರು ಹೊಲಕ್ಕೆ ಹೋಗುವ ದಾರಿಗಳಿಗೆ ಅವಕಾಶ ಕಲ್ಪಿಸುವ ನೀತಿಯನ್ನು ಹೊಸ ರೂಪದಲ್ಲಿ ತರುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇನೆ.
ರಸ್ತೆಗಳು ಎಂಬ ಪರಿಕಲ್ಪನೆಯಲ್ಲಿ ಕಾಲುದಾರಿ(Kalu Dari),
ಬಂಡಿ ಜಾಡು(Bandi jadu)ಕೂಡಾ ಒಳಗೊಂಡಿರುತ್ತವೆ' ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಭೂಸ್ವಾಧೀನ ಕಾಯ್ದೆಯಡಿ ಜಮೀಣು ಸ್ವಾಧೀನಪಡಿಸಿಕೊಂಡ ಮಾತ್ರಕ್ಕೆ 'ಬಿ ಖರಾಬ್' ಭೂಮಿಯಲ್ಲಿ ಸಾರ್ವಜನಿಕರ ಹಕ್ಕನ್ನು ರದ್ದುಪಡಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
'ಕರ್ನಾಟಕ ಭೂ ಕಂದಾಯ ಕಾಯ್ದೆ-1964ರ ಕಲಂ 67ರ ಪ್ರಕಾರ ಎಲ್ಲಾ ಸಾರ್ವಜನಿಕ ರಸ್ತೆಗಳು, ಬೀದಿಗಳು, ಓಣಿಗಳು, ಪಥಗಳು, ಸೇತುವೆಗಳು, ಕಂದಕಗಳು, ತಡೆಗೋಡೆಗಳು ಮತ್ತು ಬೇಲಿಗಳು ಸರ್ಕಾರಕ್ಕೆ ಸೇರಿವೆ ಎಂದು ಸೂಚಿಸುತ್ತದೆ. ಕಾಲುದಾರಿ(Klaudari) ಅಥವಾ ಬಂಡಿ ಜಾಡು (Bandi jadu)ಎಂಬ ಗಾಡಿ ಜಾಡು ಈ ಹಿಂದೆ ಕರೆಯಲಾಗುತ್ತಿದ್ದ ರಸ್ತೆಗಳೆನಿಸಿವೆ' ಎಂದು ನ್ಯಾಯಪೀಠ ಹೇಳಿದೆ.
'ಕಾಲುದಾರಿ, ಬಂಡಿ ಜಾಡು ಸ್ಥಳವನ್ನು ಗ್ರಾಮದ ನಕ್ಷೆಯಲ್ಲಿ(Village map) ಮತ್ತು ಸಂಬಂಧಿತ ಕಂದಾಯ ದಾಖಲೆಗಳಲ್ಲಿ ಗುರುತಿಸಲಾಗಿದೆ. ಭೂಮಾಲೀಕರಿಗೆ ಸಂಬಂಧಿಸಿದಂತೆ ಈ ಭಾಗವನ್ನು 'ಬಿ ಖರಾಬ್' ಎಂದು ವರ್ಗೀಕರಿಸಲಾಗಿದೆ. ಈ ಜಮೀನುಗಳು ಸರ್ಕಾರಕ್ಕೆ ಸೇರಿದ್ದರೂ, ಸಾರ್ವಜನಿಕರ ಹಕ್ಕನ್ನೂ ನೀಡಲಾಗಿರುತ್ತದೆ' ಎಂದು ನ್ಯಾಯಪೀಠ ತಿಳಿಸಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆಯ ಕಲಂ 68ರ ಪ್ರಕಾರ 'ಬಿ
ಖರಾಬ್'ನಲ್ಲಿ ಸಾರ್ವಜನಿಕರ ಹಕ್ಕನ್ನು ಕಸಿದುಕೊಳ್ಳಲಾಗಿಲ್ಲ. ಈ ಸ್ಥಳದ ಮತ್ತು ಸುತ್ತಮುತ್ತಲಿನ ಎಲ್ಲಾ ಗ್ರಾಮಸ್ಥರು ಅಥವಾ ಸಾರ್ವಜನಿಕರು ಕಾಲುದಾರಿ ಬಳಸಲು ಅರ್ಹರಾಗಿರುತ್ತಾರೆ. ಹಾಗಾಗಿ, ಅರ್ಜಿದಾರರು ಈ ಭೂಮಿಯನ್ನು ಮೀಸಲಿಡಬೇಕಾಗಿತ್ತು ಮತ್ತು ಅದನ್ನು ಮಾರುಕಟ್ಟೆ ಪ್ರಾಂಗಣದ ಉದ್ದೇಶಗಳಿಗಾಗಿ ಬಳಸಬಾರದು' ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.
ರೈತರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯಿಲ್ಲದೆ ಸಾಕಷ್ಟು ಕಷ್ಟ ಪಡುತ್ತಿರುತ್ತಾರೆ. ಜಮೀನು ಹತ್ತಿರವೇ ಇರುತ್ತದೆ. ಆದರೆ ಎತ್ತಿನ ಬಂಡಿ ಹೋಗುವ ದಾರಿಯಿಲ್ಲದೆ ಬಹಳಷ್ಟು ತೊಂದರೆ ಅನುಭವಿಸುತ್ತಿರುತ್ತಾರೆ. ಅದಲ್ಲದೆ ಆದರೆ ಕೆಲವರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯೇ ಇಲ್ಲ.
ಅಕ್ಕಪಕ್ಕದ ಜಮೀನುಗಳಿಗೆ ದಾರಿ ಮಾಡಿಕೊಡದೆ ತೊಂದರೆ ಕೊಡುತ್ತಾರೆ.ಆದರೆ ಸರ್ಕಾರ ಈ ಕುರಿತು ಹೊಸ ನಿಯಮಾವಳಿಗಳನ್ನು ಹೊರಡಿಸಿದೆ. ನೀವು ಭೂಮಿಯನ್ನು ಹೊಂದಿರುವಾಗ ಜಮೀನಿನಲ್ಲಿ ಕೃಷಿ ಕಾರ್ಯಾಚರಣೆಗಳು ಎಷ್ಟು ಮುಖ್ಯವೋ, ಕ್ಷೇತ್ರಕ್ಕೆ ಪ್ರವೇಶವನ್ನು ಖಚಿತಪಡಿಸಿಕೊಳ್ಳುವುದು ಅಷ್ಟೇ ಮುಖ್ಯ.
ರೈತರು ತಮ್ಮ ಕೃಷಿ ಪರಿಕರಗಳನ್ನು ಜಮೀನಿಗೆ ಒಯ್ಯಬೇಕು. ಆದರೆ ಸರಿಯಾದ ದಾರಿ ಇಲ್ಲದಿದ್ದರೆ ಸಾಧ್ಯವಿಲ್ಲ. ಅಕ್ಕಪಕ್ಕದ ರೈತರನ್ನು ದಾರಿ ಕೇಳಿದರೆ ಅವರು ನಿರಾಕರಿಸುತ್ತಾರೆ. ತೊಂದರೆ ಕೊಡಲು ಪ್ರಯತ್ನಿಸುತ್ತಾರೆ. ಇಂತಹ ಸಮಯದಲ್ಲಿ ನೀವು ಕಾನೂನಿನ ಆಶ್ರಯವನ್ನು ತೆಗೆದುಕೊಳ್ಳಬಹುದು. ಈ ಕಾಯಿದೆಯ ಮೂಲಕ ನಿಮ್ಮ ಭೂಮಿಗೆ ಪ್ರವೇಶವನ್ನು ಮಾಡಬಹುದು. ಜಮೀನಿನ ದಾರಿಯ ಬಗ್ಗೆ ಕಾನೂನು ವ್ಯವಸ್ಥೆಯಲ್ಲಿ ಕಾನೂನುಗಳಿವೆ.
ಸರಾಗಗೊಳಿಸುವ ಕಾಯಿದೆಯು ಅವಶ್ಯಕತೆಯ ಸುಲಭತೆಯನ್ನು ಸೂಚಿಸುತ್ತದೆ. ಕಾನೂನಿನ ನಿಯಮದ ಪ್ರಕಾರ.. ಯಾವುದೇ ಕ್ಷೇತ್ರವು ಮತ್ತೊಂದು ಕ್ಷೇತ್ರದ ಮುಂದೆ ಇರುವಾಗ ಹಿಂಬದಿ ಕ್ಷೇತ್ರಕ್ಕೆ ಬಿಟ್ಟುಕೊಡಬೇಕು ಇಲ್ಲದಿದ್ದರೆ ಪ್ರಕರಣ ದಾಖಲಿಸಬಹುದು. ಸರಾಗ ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕಾದ ಇನ್ನೊಂದು ಮುಖ್ಯ ವಿಷಯವೆಂದರೆ ಈ ಹಿಂದೆ ಆ ಜಮೀನಿಗೆ ರಸ್ತೆ ಇದ್ದು, ಈಗ ಅದು ಮುಚ್ಚಿದ್ದರೆ ನೀವು ಅದರ ಬಗ್ಗೆ ಕೇಸ್ ದಾಖಲಿಸಬಹುದು. ಬೇರೆ ಜಮೀನಿಗೆ ಹೋಗಬೇಕಾದರೆ ದಾರಿ ಬಿಡಬೇಕು. ಇಲ್ಲದಿದ್ದರೆ ನೊಂದ ರೈತರು ಪ್ರಕರಣ ದಾಖಲಿಸಬಹುದು. ಟೆನೆನ್ಸಿ ಆಕ್ಟ್ನ ಸೆಕ್ಷನ್ 251 ನಿಮ್ಮ ಫಾರ್ಮ್ಗೆ ಹೋಗುವ ಹೊಸ ರಸ್ತೆಯನ್ನು ನಿರ್ಮಿಸಲು ನಿಮಗೆ ಅನುಮತಿಸುತ್ತದೆ.
Village map-ನಿಮ್ಮ ಊರಿನ ಕಾಲುದಾರಿ,ಬಂಡಿದಾರಿ ತಿಳಿಯುವ ಡೈರೆಕ್ಟ್ ಲಿಂಕ್
https://landrecords.karnataka.gov.in/indexkn.aspx
ನಂತರ ಕಂದಾಯ ನಕ್ಷೆಗಳು ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೋಬಳಿ,ಗ್ರಾಮ select ಮಾಡಿ, search ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ ಗ್ರಾಮದ ಹೆಸರು ಕಾಣೆಸುತ್ತದೆ. ಆಗ ನಿಮ್ಮ ಗ್ರಾಮದ ಮುಂದಿರುವ pdf file ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದ ನಕ್ಷೆ ಕಾಣೆಸುತ್ತದೆ. ಅದರಲ್ಲಿ ಕಾಲುದಾರಿ,ಬಂಡಿದಾರಿ,ಕೆರೆ ಕಟ್ಟೆಯನ್ನು ನೋಡಬಹುದು.
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 20ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 20th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
http://blakshmi.kar.nic.in:8080/First.jsp
ನಂತರ "Home" ಪಕ್ಕದಲ್ಲಿರುವ "Quick search" ಮೇಲೆ ಕ್ಲಿಕ್ ಮಾಡಿ
ನಂತರ "Quick search" ಕೆಳಗಿರುವ "Multi search" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು Select ಮಾಡಿ
ನಂತರ ನಿಮ್ಮ ಹೆಣ್ಣು ಮಗುವಿನ ಹೆಸರು,ಜನ್ಮ ದಿನಾಂಕ ಹಾಗೂ ಭಾಗ್ಯಲಕ್ಷ್ಮಿ ಬಾಂಡ್ ನಲ್ಲಿರುವ ಮಗುವಿನ id numbe ಹಾಕಿ,captch code ಹಾಕಿ search ಮೇಲೆ ಕ್ಲಿಕ್ ಮಾಡಿದರೆ, ಪಟ್ಟಿ ದೊರೆಯಲಿದೆ
ಫಲಾನುಭವಿಗಳು ಚಾಲ್ತಿಯಲ್ಲಿನ ಬ್ಯಾಂಕ್ ಖಾತೆ ಸಂಖ್ಯೆ, ಐಎಸ್ಎಫ್ಸಿ ಕೋಡ್, ಆಧಾರ್ ಕಾರ್ಡ್ ಸಂಖ್ಯೆ, ಯೋಜನೆಯ ಒರಿಜಿನಲ್ ಬಾಂಡ್, ಮಗುವಿನ ಜನನ ಪ್ರಮಾಣ ಪತ್ರ, ತಂದೆ, ತಾಯಿ, ಮಗುವಿನ ಹೆಸರು ಬದಲಾವಣೆಯಾಗಿದ್ದರೆ ಸಂಬಂಧಿಸಿದ ಸಿಡಿಪಿಒ ಅವರಿಂದ ದೃಢೀಕರಣ ಪತ್ರ, ಬಾಂಡ್ ಕಳೆದಿದ್ದರೆ ಬಾಂಡ್ ನಕಲು ಪ್ರತಿ ಜತೆ ಎಫ್ಐಆರ್ ಪ್ರತಿ, ದತ್ತು ಮಕ್ಕಳಾಗಿದ್ದಲ್ಲಿಕಾನೂನಾತ್ಮಕವಾಗಿ ದತ್ತು ಪಡೆದ ಪೋಷಕರ ಹೆಸರನ್ನು ಸಿಡಿಪಿಒ ದೃಢೀಕರಿಸಬೇಕು. ತಾಲೂಕು ಕೋಡ್ ಬದಲಾವಣೆ ಇದ್ದಲ್ಲಿ ಸಿಡಿಪಿಒ ದೃಢೀಕರಿಸಿದ ನಂತರವೇ ಪರಿಪಕ್ವ ಹಣ ನೀಡಲಾಗುವುದು.
ಏನಿದು ಭಾಗ್ಯಲಕ್ಷ್ಮಿ ಯೋಜನೆ
ಹೆಣ್ಣು ಮಗುವಿನ ಸ್ಥಾನವನ್ನು ಮೊದಲು ಕುಟುಂಬದಲ್ಲಿ ನಂತರ ಸಮಾಜದಲ್ಲಿ ಹೆಚ್ಚಿಸಲು ಮತ್ತು ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನ ಉತ್ತೇಜಿಸಲು 2006-07ನೇ ಸಾಲಿನಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆ "ಭಾಗ್ಯಲಕ್ಷ್ಮಿ" ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಯಿತು.
ಈ ಯೋಜನೆಯ ಆರ್ಥಿಕ ಸೌಲಭ್ಯವನ್ನು ಹೆಣ್ಣು ಮಗುವಿಗೆ ಅದರ ತಾಯಿ/ತಂದೆ/ಪೋಷಕರ ಮೂಲಕ ಕೆಲವು ನಿಬಂಧನೆಗಳನ್ನು ಪೂರೈಸಿದಲ್ಲಿ ನೀಡಲಾಗುವುದು.
← ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬಗಳಲ್ಲಿ 31.3.2006ರ ನಂತರ ಜನಿಸಿದ ಹೆಣ್ಣು ಮಕ್ಕಳು ಈ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸಿಕೊಳ್ಳಲು ಆರ್ಹರಿರುತ್ತಾರೆ.
ಮಗು ಜನಿಸಿದ ಒಂದು ವರ್ಷದೊಳಗೆ ಜನನ ಪ್ರಮಾಣ ಪತ್ರವನ್ನು ಒದಗಿಸಿ ನೋಂದಾಯಿಸಲು ಅವಕಾಶವಿದೆ.
ಈ ಯೋಜನೆಯ ಸೌಲಭ್ಯಗಳನ್ನು ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬದ ಇಬ್ಬರು ಹೆಣ್ಣುಮಕ್ಕಳಿಗೆ ಸೀಮಿತಗೊಳಿಸಲಾಗಿದೆ.
ಫಲಾನುಭವಿ ಹೆಣ್ಣುಮಗುವಿನ ತಂದೆ ಅಥವಾ ತಾಯಿ ಶಾಶ್ವತ ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡಿರತಕ್ಕದ್ದು ಮತ್ತು ಕುಟುಂಬದಲ್ಲಿ ಮಕ್ಕಳ ಸಂಖ್ಯೆ 2ಕ್ಕಿಂತ ಹೆಚ್ಚಿಗೆ ಇರಬಾರದು.
ನೋಂದಣಿ ನಂತರ ಹಾಗೂ ಪೂರ್ಣ ಪರಿಶೀಲನೆ ನಂತರ ದಿನಾಂಕ:31.07.2008ರವರೆಗೆ ಜನಿಸಿದ ಪ್ರತಿ ಫಲಾನುಭವಿಗೆ ರೂ.10,000/-ಗಳನ್ನು ಆಯ್ಕೆಯಾದ ಪಾಲುದಾರ ಹಣಕಾಸು ಸಂಸ್ಥೆಯಲ್ಲಿ ನಿಶ್ಚಿತ ಠೇವಣಿಯನ್ನು ಇಡಲಾಗಿದೆ.
ಪಾಲುದಾರ ಹಣಕಾಸು ಸಂಸ್ಥೆಯು ಹೆಣ್ಣುಮಗುವಿನ ಹೆಸರಿನಲ್ಲಿ ಇಟ್ಟ ರೂ.10,000/-ಗಳ ಠೇವಣಿಯ ಮೇಲಿನ ಆದಾಯವನ್ನು ಗರಿಷ್ಠಗೊಳಿಸಿ, ಠೇವಣಿ ಹಣವನ್ನು ಬಡ್ಡಿ ಸಮೇತವಾಗಿ ಫಲಾನುಭವಿಗಳಿಗೆ 18 ವರ್ಷಗಳು ಪೂರ್ಣಗೊಂಡನಂತರ ದೊರಕಿಸಿಕೊಡುತ್ತದೆ.
ಮೊದಲ ಮಗುವಿಗೆ ಪರಿಪಕ್ವ ಮೊತ್ತ ರೂ.34,751/-ನ್ನು ಮತ್ತು ಎರಡನೇ ಮಗುವಿಗೆ ರೂ.40,918/-ನ್ನು ನೀಡಲಾಗುತ್ತದೆ.
ಫಲಾನುಭವಿಗೆ ವಿದ್ಯಾರ್ಥಿ ವೇತನ, ವಿಮೆ ಸೌಲಭ್ಯ ಮುಂತಾದ ಮಧ್ಯಂತರ ಸಂದಾಯಗಳನ್ನು ಯೋಜನೆಯಡಿ ತಿಳಿಸಲಾದ ಅರ್ಹತೆ ಮಾನದಂಡಗಳನ್ನು ಪೂರೈಸಿದಲ್ಲಿ ನೀಡಲಾಗುವುದು.
• ದಿನಾಂಕ:01.04.2006 ರಿಂದ 31.07.2008ರ ವರೆಗೆ ಜನಿಸಿ ಯೋಜನೆಯಡಿ ನೋಂದಣಿಯಾದ ಮಕ್ಕಳು ವಿದ್ಯಾರ್ಥಿ ವೇತನ ಪಡೆಯಲು ಪ್ರತಿ ತರಗತಿಯಲ್ಲಿಯೂ ವರ್ಷದಿಂದ ವರ್ಷಕ್ಕೆ ತೇರ್ಗಡೆ ಹೊಂದಬೇಕು.
ಈ ಯೋಜನೆಯನ್ನು ದಿನಾಂಕ:20.01.2009ರಂದು ಪರಿಷ್ಕರಿಸಲಾಗಿರುತ್ತದೆ. (ದಿನಾಂಕ: 01.08.2008 ರಿಂದ ಜನಿಸಿದ ಹೆಣ್ಣು ಮಕ್ಕಳಿಗೆ ಅನ್ವಯಿಸುತ್ತದೆ).
ಪರಿಷ್ಕರಿಸಲಾದ ಯೋಜನೆಯ ರೂಪುರೇಷೆಗಳು ಕೆಳಕಂಡಂತಿವೆ.
ಯೋಜನೆಯಡಿ ನೋಂದಣಿಯಾದ ಕುಟುಂಬದಲ್ಲಿನ ಮೊದಲನೇ ಹೆಣ್ಣು ಮಗುವಿನ ಹೆಸರಿನಲ್ಲಿ ರೂ. 19,300/- ಹಾಗೂ ಅದೇ ಕುಟುಂದಲ್ಲಿನ 2ನೇ ಹೆಣ್ಣು ಮಗುವಿನ ಹೆಸರಿನಲ್ಲಿ ರೂ. 18,350/- ಗಳನ್ನು ಪಾಲುದಾರ ಹಣಕಾಸು ಸಂಸ್ಥೆಯಲ್ಲಿ ಪ್ರಾರಂಭಿಕ ಠೇವಣಿ ಇಡಲಾಗುತ್ತದೆ.
18 ವರ್ಷ ಪೂರ್ಣಗೊಂಡ ನಂತರದಲ್ಲಿ ಹೆಣ್ಣು ಮಕ್ಕಳು ರೂ. 1,00,000/- ಪರಿಪಕ್ಷ ಮೊತ್ತ ಪಡೆಯಲು ಅರ್ಹರಿರುತ್ತಾರೆ.
ಯೋಜನೆಯ ಉದ್ದೇಶಗಳು:
ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನವನ್ನು ಉತ್ತೇಜಿಸುವುದು ಮತ್ತು ಆತ್ಮ ಧೈರ್ಯ ತುಂಬುವುದು.
ಬಾಲ ಕಾರ್ಮಿಕತೆ, ಹೆಣ್ಣು ಭ್ರೂಣಹತ್ಯೆ, ಬಾಲ್ಯ ವಿವಾಹ ಮತ್ತು ಹೆಣ್ಣು ಮಕ್ಕಳ ಮಾರಾಟ ಮುಂತಾದ ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟುವುದು.
ಆರೋಗ್ಯ, ಶಿಕ್ಷಣ, ಪೋಷಣೆ ಮತ್ತು ಪೌಷ್ಠಿಕ ಮಟ್ಟವನ್ನು ಉತ್ತಮ ಪಡಿಸುವುದರ ಮೂಲಕ ಹೆಣ್ಣು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯನ್ನು ಉತ್ತಮಪಡಿಸುದು.
ಹೆಣ್ಣು ಮಗುವಿಗೆ ಆರ್ಥಿಕ ನೆರವು ನೀಡುವುದರ ಮೂಲಕ ಅವರನ್ನು ಸಮಾಜದಲ್ಲಿ ಸದೃಢರನ್ನಾಗಿ ಮಾಡುವುದು.
ಪ್ರಸ್ತುತ ಯೋಜನೆಯ ಸೌಲಭ್ಯ ಪಡೆಯಲು ಇರಬೇಕಾದ
ಅರ್ಹತೆಯ ಅಂಶಗಳು:
• ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಗುರುತಿಸಿ ಶಾಶ್ವತ ಬಿಪಿಎಲ್ ಕಾರ್ಡ್/ಆದ್ಯತಾ ಕುಟುಂಬ ಪಡಿತರ ಚೀಟಿ ಹೊಂದಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಎರಡು ಹೆಣ್ಣು ಮಕ್ಕಳು ಯೋಜನೆಯಡಿ ನೊಂದಣಿ ಮಾಡಲು ಅರ್ಹರಿರುತ್ತಾರೆ.
• ಕುಟುಂಬದಲ್ಲಿ ಮಕ್ಕಳ ಸಂಖ್ಯೆ ಎರಡನ್ನು ಮೀರಿರಬಾರದು. ಈ ಕುಟುಂಬವು ಮಗುವಿನ ತಂದೆ ಅಥವಾ ತಾಯಿ
ಯಾರದಾರೊಬ್ಬರು ಶಾಶ್ವತ ಕುಟುಂಬ ಯೋಜನೆಯ ಪದ್ಧತಿಯನ್ನು ಅಳವಡಿಸಿಕೊಂಡಿರಬೇಕು. ವಿಶೇಷ ಪ್ರಕರಣಗಳಲ್ಲಿ ಅಂದರೆ ಮೊದಲನೇ ಹೆರಿಗೆಯಲ್ಲಿ ಅವಳಿ ತ್ರಿವಳಿ ಹೆಣ್ಣು ಮಕ್ಕಳು ಜನಿಸಿದ್ದಲ್ಲಿ ಹಾಗು ಎರಡನೇ ಹೆರಿಗೆಯಲ್ಲಿ ಅವಳಿ/ತ್ರಿವಳಿ ಹೆಣ್ಣು ಮಕ್ಕಳು ಜನಿಸಿದ್ದಲ್ಲಿ ಈ ಎಲ್ಲಾ ಹೆಣ್ಣು ಮಕ್ಕಳಿಗೂ ಸೌಲಭ್ಯ ನೀಡುವುದು. ಈ ಸೌಲಭ್ಯವನ್ನು ಎರಡು ಹೆರಿಗೆಗೆ ಮಾತ್ರ ಮಿತಿಗೊಳಿಸುವುದು. ಇಂತಹ ಪ್ರಕರಣಗಳಲ್ಲಿ ಮಾತ್ರ ಕುಟುಂಬದ ಮಕ್ಕಳ ಸಂಖ್ಯೆ ಎರಡನ್ನು ಮೀರಿರಬಾರದು ಎಂಬ ನಿಯಮವನ್ನು ಸಡಿಲಿಸಲಾಗಿದೆ.
ಈ ಯೋಜನೆಯನ್ನು ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲೂ ಅನುಷ್ಟಾನಗೊಳಿಸಲಾಗುವುದು. ಅಂಗನವಾಡಿ ಕೇಂದ್ರಗಳು ಇಲ್ಲದೆ ಇರುವ ಪ್ರದೇಶಗಳಲ್ಲಿ ವಾಸಿಸುವ ಪೋಷಕರು ತಮ್ಮ ಸಮೀಪದ ಅಂಗನವಾಡಿ ಕೇಂದ್ರದಲ್ಲಿ ನೊಂದಣಿ ಮಾಡುವುದು. ಮಗುವಿನ ಜನನವನ್ನು ಕಡ್ಡಾಯವಾಗಿ ನೊಂದಾಯಿಸಿರಬೇಕು ಹಾಗೂ ಜನನ ಪ್ರಮಾಣ ಪತ್ರವನ್ನು ಹೊಂದಿರಬೇಕು.
ಪರಿಪಕ್ವ ಮೊತ್ತವನ್ನು ಪಡೆಯಲು ಫಲಾನುಭವಿ ಮಗು ಕನಿಷ್ಠ 8ನೇ ತರಗತಿಯವರೆಗೆ ವಿದ್ಯಾಭ್ಯಾಸವನ್ನು ಪಡೆದಿರಬೇಕು. ಆದರೆ ವಿಕಲಚೇತನ ಮಕ್ಕಳಿಗೆ ವಿನಾಯಿತಿ ನೀಡಲಾಗಿದ್ದು, ಸದರಿ ಮಕ್ಕಳು 1 ರಿಂದ 5ನೇ ತರಗತಿವರೆಗೆ ವ್ಯಾಸಂಗ ಮಾಡಿರಬೇಕು. ಒಂದು ವೇಳೆ ವಿಕಲಚೇತನ ಮಕ್ಕಳು ತೀವ್ರತರವಾದ ವಿಕಲತೆಯಿಂದ ಬಳಲುತ್ತಿದ್ದಲ್ಲಿ ಸಂಬಂಧಪಟ್ಟ ಜಿಲ್ಲಾ ಉಪ ನಿರ್ದೆಶಕರು ಪ್ರತಿ ಪ್ರಕರಣಗಳ ಸಾಧಕ ಬಾಧಕಗಳನ್ನು ಪರಿಶೀಲಿಸಿ ಈ ಷರತ್ತನ್ನು ಸಹ ಸಡಿಲಿಸಲು ಅಧಿಕಾರ ನೀಡಿ ಆದೇಶಿಸಿದೆ.
• 5ನೇ ಮತ್ತು 8ನೇತರಗತಿ ಉತ್ತೀರ್ಣರಾಗಿರುವ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರಿಂದ ದೃಢೀಕರಣ ಪಡೆದು ಸಲ್ಲಿಸುವುದು.
• ಬಾಲಕಾರ್ಮಿಕ ನಿಷೇಧ ಕಾಯ್ದೆ 1986ರಂತೆ ಬಾಲ ಕಾರ್ಮಿಕಳಾಗಿರತಕ್ಕದ್ದಲ್ಲ.
• 18 ವರ್ಷ ಪೂರೈಸುವ ಮೊದಲು ವಿವಾಹವಾಗತಕ್ಕದ್ದಲ್ಲ.
ಆಯ್ಕೆಯಾದ ಫಲಾನುಭವಿಯು ಮೇಲೆ ತಿಳಿಸಿದ ಅರ್ಹತೆಯ ಮಾನದಂಡಗಳಲ್ಲಿನ ಯಾವುದೇ ಒಂದು ಷರತ್ತುನ್ನು ಪೂರೈಸದಿದ್ದಲ್ಲಿಯೂ ಸಹ ಸೌಲಭ್ಯವನ್ನು ಮುಟ್ಟುಗೋಲು ಹಾಕಲಾಗುವುದು.
ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್(Gram one online application) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಟಾನಗೊಳಿಸುತ್ತಿದ್ದು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.15 ಕಡೆಯ ದಿನವಾಗಿದ್ದು ಆಸಕ್ತಿವುಳ್ಳವರು ಅರ್ಜಿಗಳನ್ನು https://www.karnatakaone.gov.in/Public/GramOneFrachiseeTerms ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು ಹಾಗೂ ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಗ್ರಾಮಓನ್ ನಲ್ಲಿ ಸಿಗುವ ಸೇವೆಗಳು ಹಾಗೂ ಅದಕ್ಕೆ ಬೇಕಾದ ದಾಖಲೆಗಳ ಪಟ್ಟಿಯನ್ನು ಈ ಕೆಳಗಿನ PDF ಮೂಲಕ ಡೌನ್ಲೋಡ್ ಮಾಡಿಕೊಳ್ಳಿ
]]>
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ - https://krushirushi.in/Tahasildar-varification-status-approved-1634
]]>ಅನ್ನಭಾಗ್ಯ ಫಲಾನುಭವಿಗಳಿಗೆ ಸಿಹಿಸುದ್ದಿ ಎನ್ನುವಂತೆ ಈ ತಿಂಗಳು ಕುಟುಂಬದ ಪ್ರತಿ ಸದಸ್ಯರಿಗೆ ತಲಾ 15 ಕೆ.ಜೆ ಅಕ್ಕಿಯನ್ನು ವಿತರಿಸಲಾಗುತ್ತದೆ.
ಈ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್ ಮುನಿಯಪ್ಪ ಮಾಹಿತಿ ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆ.ಜಿ. ಅಕ್ಕಿಯನ್ನು ಸೇರಿಸಿ, ಈ ತಿಂಗಳು 15 ಕೆ.ಜಿ. ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಂದಹಾಗೇ ರಾಜ್ಯ ಸರ್ಕಾರದಿಂದ ಈ ಮೊದಲು ಹತ್ತು ಕೆಜಿ ಅಕ್ಕಿ ಹಾಗೂ ಹೆಚ್ಚುವರಿ ಐದು ಕೆಜಿ ಅಕ್ಕಿಯ ಬದಲಾಗಿ ಹಣವನ್ನು ಅನ್ನಭಾಗ್ಯ ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುತ್ತಿತ್ತು. ಅದನ್ನು ನಿಲ್ಲಿಸಲಾಗಿದ್ದು, ಈ ತಿಂಗಳು ಅನ್ನಭಾಗ್ಯ ಫಲಾನುಭವಿಗಳಿಗೆ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 15 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತದೆ.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 10ಕೆಜಿ ಅನ್ನಭಾಗ್ಯ ಅಕ್ಕಿ(Annabhagya)
ಫೆಬ್ರವರಿ.21ರಂದು ಈ ವಿಷಯವಾಗಿ ಮಾತನಾಡಿದ್ದಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದಿದ್ದರು.
ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದಿದ್ದರು.
ಅದರಂತೆ ಇಂದು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ರೂ.4000 ಬಾಕಿ ಹಣವನ್ನು ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ. ಇಂದು ಅನೇಕ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗಿರುವುದಾಗಿ ತಿಳಿದು ಬಂದಿದೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರು, ಈಗಾಗಲೇ ನವೆಂಬರ್ ತಿಂಗಳ ಹಣವನ್ನು ಎಲ್ಲರ ಅಕೌಂಟ್ಗೆ ಹಾಕಿದ್ದೇವೆ. ಡಿಸೆಂಬರ್ ಮತ್ತು ಜನವರಿ ಎರಡು ತಿಂಗಳದ್ದು ಬಾಕಿ ಇದೆ. ಡಿಸೆಂಬರ್ದು ಇವತ್ತು ಬಿಲ್ಲಿಂಗ್ ನಡೀತಾ ಇದೆ. ನಾಲೈದು ದಿನದಲ್ಲಿ ಮಹಿಳೆಯರ ಅಕೌಂಟ್ಗೆ ಹಣ ಜಮಾವಣೆ ಆಗುತ್ತದೆ. ಡಿಸೆಂಬರ್ ಮುಗಿಸಿದ ತಕ್ಷಣ ಜನವರಿ ಮತ್ತು ಫೆಬ್ರವರಿ ತಿಂಗಳದ್ದು ಮತ್ತೆ ತಗೋತೀವಿ. ಆ ಬಳಿಕ ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ಹೇಳಿದರು.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಕರ್ನಾಟಕದ ಕುಸುಬೆ(Safflower) ಬೆಳೆಗಾರರಿಗೆ ಸರ್ಕಾರವು ಸಂತಸದ ಸುದ್ದಿಯನ್ನು ನೀಡಿದೆ. ಮಾರುಕಟ್ಟೆಯಲ್ಲಿ ಕುಸಿದಿರುವ ಕುಸುಬೆ ಬೆಲೆಗೆ ಪರಿಹಾರವಾಗಿ, ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಪ್ರತಿ ಕ್ವಿಂಟಾಲ್ಗೆ ₹5,940 ದರವನ್ನು ನಿಗದಿಪಡಿಸಲಾಗಿದೆ.
ಇದರಿಂದಾಗಿ ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಕೃಷಿ ಮಾರುಕಟ್ಟೆ ಸಚಿವರು ಈ ಕುರಿತು ಮಾಹಿತಿ ನೀಡಿದ್ದು, ಮಾರುಕಟ್ಟೆಯಲ್ಲಿನ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಒಳಗಾಗಿದ್ದ ರೈತರಿಗೆ ಈ ಬೆಂಬಲ ಬೆಲೆ ಸಹಾಯ ಮಾಡಲಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಕುಸುಬೆ(Kusube) ಕಟಾವು ಪ್ರಕ್ರಿಯೆ ಆರಂಭವಾಗಿದ್ದು, ಮಾರ್ಚ್ ಅಂತ್ಯದವರೆಗೆ ನಡೆಯಲಿದೆ ಮತ್ತು ಏಪ್ರಿಲ್ ವರೆಗೂ ಮಾರುಕಟ್ಟೆಗೆ ಕುಸುಬೆ ಆವಕವಾಗಲಿದೆ.
ರೈತರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುವ ಬದಲು, ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುವಂತೆ ಸಚಿವರು ಮನವಿ ಮಾಡಿದ್ದಾರೆ.
]]>
ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.
ಏನಿದು ಫ್ರೂಟ್ಸ್ ನಂಬರ್
ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.
ನಿಮ್ಮ FID ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.
ಏಕೆ ನೋಂದಾಯಿಸಬೇಕು?
ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್ ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ
ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.
ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.
ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು
]]>ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಡಿಸೆಂಬರ್ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>ಪ್ರಧಾನ ಮಂತ್ರಿ ಫಸಲ್ ಭೀಮಾ(Pradan mantri fasal bheema yojana) ಯೋಜನೆಯಡಿ 2023-24 ನೇ ಸಾಲಿನ ಮುಂಗಾರು(Kharif), ಹಿಂಗಾರು(Rabi) ಮತ್ತು ಬೇಸಿಗೆ(Summer) ಹಂಗಾಮುಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ, ಬೆಳೆ ಸಮೀಕ್ಷೆಯ(crop survey) ದತ್ತಾಂಶಗಳನ್ನು ಬೆಳೆ ನೋಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗಳನ್ನು ಅಳವಡಿಸಿ ತಾಳೆಯಾದ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾಂಶದಲ್ಲಿ ವಿಮಾ ಪರಿಹಾರ ಲೆಕ್ಕಹಾಕಲಾಗಿದೆ.
ತಾಳೆಯಾಗದೆ ಇರುವ ಪ್ರಸ್ತಾವನೆಗಳನ್ನು ಉಲ್ಲೇಖಿತ ಸರ್ಕಾರದ ಆದೇಶದಂತೆ ಸಂಬಂಧಪಟ್ಟ ತಾಲ್ಲೂಕು (ಕೃಷಿ/ತೋಟಗಾರಿಕೆ/ಬ್ಯಾಂಕ್) ಮಟ್ಟದ ಅಧಿಕಾರಿಗಳಿಗೆ ಪರಿಶೀಲಿಸಲು ಸಂರಕ್ಷಣೆ ತಂತ್ರಾಂಶದ ಮೂಲಕ ಕಳುಹಿಸಲಾಗಿತ್ತು. ತಾಲ್ಲೂಕು ಮಟ್ಟದ ಅಧಿಕಾರಿಗಳು ಸದರಿ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆಯಲ್ಲಿ ದಾಖಲಾದ ಛಾಯಚಿತ್ರದೊಂದಿಗೆ ಪರಿಶೀಲಿಸಿ ಸಂಬಂಧಪಟ್ಟ ವಿಮಾ ಸಂಸ್ಥೆಯವರಿಗೆ Accept ಅಥವಾ Reject ಮಾಡಲು ಶಿಫಾರಸ್ಸು ಮಾಡಿರುತ್ತಾರೆ, ತದನಂತರ ವಿಮಾ ಸಂಸ್ಥೆಯವರು ಪ್ರಸ್ತಾವನೆಗಳನ್ನು ಮರುಪರಿಶೀಲಿಸಿ ಅಂತಿಮವಾಗಿ Accept ಅಥವಾ Reject ಮಾಡಿರುತ್ತಾರೆ.
ಪ್ರಸ್ತುತ ಸಂರಕ್ಷಣೆ ತಂತ್ರಾಂಶದನ್ವಯ ಮುಂಗಾರು ಹಂಗಾಮಿನಲ್ಲಿ Reject ಆದ 5356 ಪುಸ್ತಾವನೆಗಳು, ಹಿಂಗಾರು ಹಂಗಾಮಿನಲ್ಲಿ Reject ಆದ 2763 ಪ್ರಸ್ತಾವನೆಗಳು ಮತ್ತು ಬೇಸಿಗೆ ಹಂಗಾಮಿನಲ್ಲಿ 4 ಪ್ರಸ್ತಾವನೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಪ್ರಸ್ತುತ ತಿರಸ್ಕೃತಗೊಂಡ(Crop insurance rejected list)ಪ್ರಸ್ತಾವನೆಗಳ ಕುರಿತು ತಾಲ್ಲೂಕು/ಹೋಬಳಿ ಮಟ್ಟದಲ್ಲಿ ರೈತರಿಗೆ ಮಾಹಿತಿಯನ್ನು ನೀಡಲು ಸೂಚಿಸಿದೆ ಹಾಗೂ ಸದರಿ ಪಟ್ಟಿಯನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ ಮತ್ತು ಜಿಲ್ಲೆಯ ಪ್ರಾದೇಶಿಕ ದಿನ ಪತ್ರಿಕೆಗಳಲ್ಲಿ ಪ್ರಕಟಿಸಲಾಗಿದೆ.
ಮಾಹಿತಿಯನ್ನು ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ವಿಮಾ ಅರ್ಜಿ ತಿರಸ್ಕೃತಗೊಂಡ ಬಗ್ಗೆ ಆಕ್ಷೇಪಣೆಗಳನ್ನು ಪಡೆಯಬಹುದಾಗಿರುತ್ತದೆ. ಸಂಬಂಧಪಟ್ಟ ರೈತರು ಆಕ್ಷೇಪಣೆ ಇದ್ದಲ್ಲಿ ಮಾತ್ರ ಮನವಿಯನ್ನು ಸಲ್ಲಿಸಲು ಹಾಗೂ ಮರುಪರಿಶೀಲಿಸಲು, ಸದರಿ ಮನವಿಯೊಂದಿಗೆ ಬೆಳೆ ವಿಮೆಗೆ ನೋಂದಣಿಯಾಗಿರುವ ಬೆಳೆಯನ್ನು ಬೆಳೆದಿರುವ ಕುರಿತು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಅಂತಹ ಮನವಿಗಳನ್ನು ತಾಲ್ಲೂಕು ಮಟ್ಟದ ಸಮಿತಿಯಲ್ಲಿ ಮಂಡಿಸಿ ಕೂಲಂಕುಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದು. ತಾಲ್ಲೂಕು ಮಟ್ಟದ ಸಮಿತಿಯ ನಿರ್ಣಯವನ್ನು ರೈತ ಒಪ್ಪದಿದ್ದಲ್ಲಿ, ಜಿಲ್ಲಾ ಮಟ್ಟದ ಸಮಿತಿಗೆ ಮೇಲ್ಮನವಿ ಸಲ್ಲಿಸಬಹುದು. ಜಿಲ್ಲಾ ಮಟ್ಟದ ಸಮಿತಿಯ ನಿರ್ಧಾರವು ಅಂತಿಮವಾಗಿರುತ್ತದೆ. ಆಯಾ ತಾಲ್ಲೂಕಿನಲ್ಲಿ ಯಾವುದೇ ಆಕ್ಷೇಪಣೆಗಳು 15 ದಿನಗಳೊಳಗಾಗಿ ರೈತರಿಂದ ಬಂದಿಲ್ಲದಿದ್ದರೆ, ತಾಲ್ಲೂಕಿನ ಎಲ್ಲಾ ಪ್ರಸ್ತಾವನೆಗಳನ್ನು reject ಮಾಡುವುದು.
ತದನಂತರ, ತಾಲ್ಲೂಕು/ ಜಿಲ್ಲಾ ಸಮಿತಿಯ ನಡವಳಿಯನ್ವಯ ಸಂರಕ್ಷಣೆ ತಂತ್ರಾಂಶದಲ್ಲಿ PMFBY(loanee and Non Loanee proposals) ಅಧಿಕಾರಿಗಳ login ನಲ್ಲಿ ಹಾಗೂ PMFBY ತೋಟಗಾರಿಕೆ ಬೆಳೆಗಳನ್ನು (loanee and Non Loanee proposals) ತಾಲ್ಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳ login ನಲ್ಲಿ ಸಿಂಧುವಾದ ಪ್ರಸ್ತಾವನೆಗಳನ್ನು (accepted proposals) accept ಮಾಡುವುದು, ಉಳಿದ ಪ್ರಸ್ತಾವನೆಗಳನ್ನು reject ಮಾಡುವುದು. ಸಂರಕ್ಷಣೆ ತಂತ್ರಾಂಶದಲ್ಲಿ ಪ್ರಸ್ತಾವನೆಗಳನ್ನು accept ಅಥವ reject ಮಾಡುವಲ್ಲಿ ಜಾಗೃತತೆಯನ್ನು ವಹಿಸಲು ಸೂಚಿಸಿದೆ.
ವಿಶೇಷ ಸೂಚನೆ: ಎಲ್ಲಾ ಹಂತದ ಸಭೆಗಳಲ್ಲಿ ವಿಮಾ ಸಂಸ್ಥೆ ಹಾಗೂ ತೋಟಗಾರಿಕೆ ಇಲಾಖೆ
ಅಧಿಕಾರಿಯವರ ಉಪಸ್ಥಿತಿ ಹಾಗೂ ಕೈಗೊಳ್ಳುವ ನಿರ್ಧಾರಗಳಲ್ಲಿ ವಿಮಾ ಸಂಸ್ಥೆಯವರ ಸಹಮತಿ * ಅವಶ್ಯವಿರುತ್ತದೆ. ತಿರಸ್ಕೃತಗೊಂಡ ಪ್ರಸ್ತಾವನೆಗಳ ಕುರಿತು ಪ್ರಚಾರ ಪಡಿಸಿರುವ ಬಗ್ಗೆ, ಸಭೆಯ ನಡವಳಿಯ ಪ್ರತಿಯನ್ನು ಹಾಗೂ ಸಿಂಧುವಾದ ಪ್ರಸ್ತಾವನೆಗಳ (accepted proposals) ಅಗತ್ಯ ದಾಖಲೆಗಳನ್ನು ವಿಮಾ ಸಂಸ್ಥೆಯವರಿಗೆ ಒದಗಿಸತಕ್ಕದು. ಕೇಂದ್ರ ಕಛೇರಿಗೆ ತಿರಸ್ಕೃತಗೊಂಡ ಪ್ರಸ್ತಾವನೆಗಳ ಕುರಿತು ಪ್ರಚಾರ ಪಡಿಸಿರುವ ಬಗ್ಗೆ ಮತ್ತು ಸಭೆಯ ನಡವಳಿಯ ಪ್ರತಿಯನ್ನು ಸಲ್ಲಿಸಿದ ನಂತರ ಸಭೆಯ ನಡವಳಿಯಂತೆ ಪ್ರಸ್ತಾವನೆಗಳನ್ನು ಇತ್ಯರ್ಥಪಡಿಸಲು ವಿಮಾ ಸಂಸ್ಥೆಯವರಿಗೆ ಸೂಚಿಸಲಾಗುವುದು.
ತಾಲ್ಲೂಕು/ಜಿಲ್ಲಾ ಮಟ್ಟದ ಸಮಿತಿಯ ಸಭೆಗಳಲ್ಲಿ ಆಕ್ಷೇಪಿಸಿದ ಪ್ರಸ್ತಾವನೆಗಳನ್ನು ಪರಿಶೀಲಿಸಲು ಗಮನಿಸಬೇಕಾದ ಅಂಶಗಳು ಈ ಕೆಳಕಂಡಂತಿದೆ,
1) 2023-24ರ ಪಹಣಿ ಪತ್ರಿಕೆಯಲ್ಲಿ (RTC) ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರಬೇಕು.
2) ಬೆಂಬಲ ಬೆಲೆ ಪ್ರಯೋಜನ ಪಡೆದಿದಲ್ಲಿ, ರಶೀದಿ ಪಡೆದು ಪರಿಶೀಲಿಸುವುದು.
3) ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನು APMC ಮಾರುಕಟ್ಟೆಗೆ ಮಾರಾಟ ಮಾಡಿದ್ದಲ್ಲಿ ಸದರಿ ದಾಖಲೆ ಪಡೆದು ಪರಿಶೀಲಿಸುವುದು.
ತಿರಸ್ಕೃತ ಗೊಂಡಿರುವ ಬೆಳೆ ವಿಮೆ ಪ್ರಸ್ತಾವನೆಗಳ ರೈತರ ಪಟ್ಟಿಯನ್ನು ಗ್ರಾಮ ಪಂಚಾಯತ್, ರೈತ ಸಂಪರ್ಕ ಕೇಂದ್ರ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪ್ರದರ್ಶಿಸಲಾಗಿದೆ. ಸಂಬಂಧಪಟ್ಟ ರೈತರು ಆಕ್ಷೇಪಣೆ ಇದ್ದಲ್ಲಿ ಫೆಬ್ರವರಿ 27 ನೇ ದಿನಾಂಕ ಒಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಟ್ಟು ಆಕ್ಷೇಪಣೆ ಸಲ್ಲಿಸಿ.
ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "kharif" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-Proposal number ಎಂದರೆ ಬೆಳೆವಿಮೆ ಕಟ್ಟಿದ ರಶೀದಿಯಲ್ಲಿ 6 ಸಂಖ್ಯೆಯ acknowledgment number.ಒಂದು ವೇಳೆ ಬೆಳೆ ವಿಮೆ ಕಟ್ಟಿದ ರಶೀದಿ ಕಳೆದು ಹೊಗಿದ್ದರೆ ನಿಮ್ಮ ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಿ)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ನಂತರ Select ಮೇಲೆ ಕ್ಲಿಕ್ ಮಾಡಿದರೆ,ಈ ಕೆಳಗಿನಂತೆ ಬೆಳೆವಿಮೆ ಕಂಪನಿಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಿರುವುದನ್ನು ತೋರಿಸುತ್ತದೆ.ಒಂದು ವೇಳೆ ಅರ್ಜಿ ತಿರಸ್ಕೃತಗೊಂಡಿದ್ದರೆ Application rejected ಎಂದು ತೋರಿಸುತ್ತದೆ.ಹಾಗೇನಾದರು ಅರ್ಜಿ ತಿರಸ್ಕೃತಗೊಂಡಿದ್ದರೆ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಟ್ಟು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅದೇ ರೀತಿ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಬೆಳೆ ವಿಮೆ ತಿರಸ್ಕೃತ ಪಟ್ಟಿಯನ್ನು(Bele vime rejected list) ಲಗತ್ತಿಸಲಾಗಿದ್ದು,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಆಕ್ಷೇಪಣೆ ಸಲ್ಲಿಸಿ.
ಕೇಂದ್ರ ವಲಯದ ಯೋಜನೆ ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಸರ್ಕಾರವು ಹಣಕಾಸು ಸೌಲಭ್ಯಗಳನ್ನು ಒದಗಿಸುತ್ತಿದ್ದು, ರೂ. 2 ಕೋಟಿ ಸಾಲದ ಮೊತ್ತಕ್ಕೆ ವಾರ್ಷಿಕ ಶೇ. 3ರಂತೆ 7 ವರ್ಷದ ಅವಧಿಗೆ ಬಡ್ಡಿ ಸಹಾಯಧನ ಲಭ್ಯವಿರುತ್ತದೆ.
ಅರ್ಹ ಕೃಷಿ ಚಟುವಟಿಕೆಗಳು/ಯೋಜನೆಗಳು ಈ ಕೆಳಗಿನಂತಿವೆ
ಇ-ಮಾರುಕಟ್ಟೆ ವೇದಿಕೆ ಸೇರಿದಂತೆ ಸರಬರಾಜು ಸರಪಳಿ ಸೇವೆಗಳು ಗೋದಾಮುಗಳು ಮತ್ತು ಸೈಲೊಗಳು + ಪ್ಯಾಕ್ ಹೌಸ್ಗಳು ವಿಂಗಡಣೆ ಮತ್ತು ಶ್ರೇಣೀಕರಣ ಘಟಕಗಳು ಶೀತಲಗೃಹ ಸರಪಳಿಗಳು ಸಾಗಾಣಿಕೆ ಸೌಲಭ್ಯಗಳು ಪ್ರಾಥಮಿಕ ಸಂಸ್ಕರಣಾ ಕೇಂದ್ರಗಳು ಹಣ್ಣು ಮಾಗಿಸುವ ಘಟಕಗಳು
ಮೌಲ್ಯಮಾಪನ ಘಟಕಗಳು ಸಂಕುಚಿತ ಜೈವಿಕ ಅನಿಲ (CBG) ಸ್ಥಾವರ + ಸಾವಯವ ಪರಿಕರ ಉತ್ಪಾದನೆ + ಜೈವಿಕ ಉತ್ತೇಜಕ ಉತ್ಪಾದನಾ ಘಟಕಗಳು * ಸಸ್ಯ ನರ್ಸರಿ /ಅಂಗಾಂಶ ಕೃಷಿ ಬೀಜ ಸಂಸ್ಕರಣೆ + ಕೃಷಿ ಯಂತ್ರಧಾರೆ ಕೇಂದ್ರಗಳು ಸ್ಮಾರ್ಟ್ ಮತ್ತು ನಿಖರವಾದ ಕೃಷಿ ಸಂಯೋಜಿತ ಸ್ಪಿರುಲಿನಾ ಉತ್ಪಾದನೆ ಮತ್ತು ಸಂಸ್ಕರಣಾ ಘಟಕಗಳು ರೇಷ್ಮೆ ಕೃಷಿ ಸಂಸ್ಕರಣಾ ಘಟಕ • ಜೇನು ಸಂಸ್ಕರಣಾ ಘಟಕ ಪ್ಲಾಂಟ್ ಕ್ಯಾರಂಟೈನ್ ಘಟಕಗಳು ಮತ್ತು ಸಾಮೂಹಿಕ ಕೃಷಿ ಅಡಿ: ಜಲಕೃಷಿ, ವಾಯುಕೃಷಿ, ಹಸಿರುಮನೆ, ಬಹುಮಹಡಿ ಕೃಷಿ, ಅಣಬೆ ಬೇಸಾಯ
ಅರ್ಹ ಫಲಾನುಭವಿಗಳು
ರೈತರು/ ರೈತ ಉತ್ಪಾದಕ ಸಂಸ್ಥೆಗಳು, ಪ್ರಾಂತೀಯ ಸಹಕಾರ ಒಕ್ಕೂಟಗಳು ಕೃಷಿ ಉದ್ಯಮಿಗಳು / ನವೋದ್ಯಮಿಗಳು ಪ್ರಾಥಮಿಕ ಕೃಷಿ ಕ್ರೆಡಿಟ್ ಸಹಕಾರ ಸಂಘಗಳು + ವಿವಿಧೋದ್ದೇಶ ಸಹಕಾರ ಸಂಘಗಳು * ಸ್ವ-ಸಹಾಯ ಗುಂಪುಗಳು / ಜಂಟಿ ಬಾಧ್ಯತಾ ಗುಂಪುಗಳು / ಖಾಸಗಿ ಮಾಲೀಕತ್ವ ಸಂಸ್ಥೆಗಳು.
ಯೋಜನೆಯಲ್ಲಿ ಭಾಗವಹಿಸುವ ಹಣಕಾಸು ಸಂಸ್ಥೆಗಳು:
ರಾಷ್ಟ್ರೀಕೃತ ಬ್ಯಾಂಕುಗಳು + ಶೆಡ್ಯೂಲ್ಡ್ ಸಹಕಾರಿ ಬ್ಯಾಂಕ್ ಗಳು + ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು ಸಣ್ಣ ಹಣಕಾಸು ಬ್ಯಾಂಕುಗಳು + ಬ್ಯಾಂಕೇತರ ಹಣಕಾಸು ಸಂಸ್ಥೆಗಳು + ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (ಎನ್ ಸಿಡಿಸಿ).
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
CPMU, ಕೃಷಿ ಮತ್ತು ರೈ ಕಲ್ಯಾಣ ಮಂತ್ರಾಲಯದ ಮೂಲಕ ಪರಿಶೀಲಿಸಲಾದ ಅರ್ಜಿಯನ್ನು ಬ್ಯಾಂಕ್ ಶಾಖೆಗೆ ಆನ್ ಲೈನ್ ನಲ್ಲಿ ವರ್ಗಾಯಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕೃಷಿ/ತೋಟಗಾರಿಕೆ ಇಲಾಖೆ, ಜಿಲ್ಲಾ ನಬಾರ್ಡ್ ವ್ಯವಸ್ಥಾಪಕರು, ನಿಮ್ಮ ವ್ಯಾಪ್ತಿಯ ಬ್ಯಾಂಕ್/ ಹಣಕಾಸು ಸಂಸ್ಥೆಗಳನ್ನು ಸಂಪರ್ಕಿಸಬಹುದು.
]]>ಇಂದಿನಿಂದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)
1.ಅಶ್ವಿನಿ-
ದಿನಾಂಕ-14-4-2025
ಸಾಮಾನ್ಯ ಮಳೆ
ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,
2.ಭರಣಿ
ದಿನಾಂಕ-28-4-2025
ಸಾಮಾನ್ಯ ಮಳೆ
ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು
3.ಕೃತಿಕಾ
ದಿನಾಂಕ-11-5-2025
ಸಾಮಾನ್ಯ ಮಳೆ
ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು
4.ರೋಹಿಣಿ-
ದಿನಾಂಕ-25-5-2025
ಉತ್ತಮ ಮಳೆ
ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು
5.ಮೃಗಶಿರ
ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ
ಉತ್ತಮ ಮಳೆ
ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು
6.ಆರಿದ್ರಾ
ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)
ಉತ್ತಮ ಮಳೆ
ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.
7.ಪುನರ್ವಸು
ದಿನಾಂಕ-6-7-2025
ಉತ್ತಮ ಮಳೆ
ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು.
8.ಪುಷ್ಯ
ದಿನಾಂಕ-20-7-2025
ಉತ್ತಮ ಮಳೆ
ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ) ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.
9.ಆಶ್ಲೇಷ
ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ
ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು
10.ಮಘ
ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ
ಉತ್ತಮ ಮಳೆ
ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.
11.ಹುಬ್ಬ
ದಿನಾಂಕ-31-8-2025
ಉತ್ತಮ ಮಳೆ
ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ. ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ
12.ಉತ್ತರ
ದಿನಾಂಕ-13-09-2025
ಉತ್ತಮ ಮಳೆ
ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ
13.ಹಸ್ತ
ದಿನಾಂಕ-27-9-2025
ಉತ್ತಮ ಮಳೆ
14.ಚಿತ್ತ
ದಿನಾಂಕ-11-10-2025
ಉತ್ತಮ ಮಳೆ
ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.
15.ಸ್ವಾತಿ
ದಿನಾಂಕ-24-10-2025
ಉತ್ತಮ ಮಳೆ
ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.
16.ವಿಶಾಖ
ದಿನಾಂಕ-6-11-2025
ಉತ್ತಮ ಮಳೆ
ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.
ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.
https://krushirushi.in/contact-us
ಇಂತಿ ನಿಮ್ಮ
ಶಿವನಗೌಡ ಪಾಟೀಲ
M.Sc(ಕೃಷಿ), ಕೀಟಶಾಸ್ತ್ರ
]]>
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಈ ಮೊದಲು ಆಧಾರ್ಗೆ ಸಂಬಂಧಿತ ಮಾಹಿತಿ ಅಪ್ಲೋಡ್ ಮಾಡಿಕೊಳ್ಳಲು ಈ ಮೊದಲು ಡಿಸೆಂಬರ್ 14 ಕೊನೆಯ ದಿನವಾಗಿತ್ತು, ಈಗ ಜೂನ್ 14ರವರೆಗೆ ಅವಧಿ ವಿಸ್ತರಿಸಲಾಗಿದ್ದು,ಆನ್ಲೈನ್ನಲ್ಲಿ ಉಚಿತವಾಗಿ ಆಧಾರ್ ಅಪ್ಡೇಟ್ ಮಾಡಿಕೊಳ್ಳಿ
ನೀವು ಆಧಾರ್ ಸಂಖ್ಯೆ ಪಡೆದು ಹತ್ತು ವರ್ಷಗಳಾಗಿದ್ದಲ್ಲಿ ಹಾಗೂ ಇದುವರೆಗೂ ಯಾವುದೇ ಮಾಹಿತಿ ಅಪ್ಡೇಟ್ ಮಾಡಿಕೊಂಡಿರದಿದ್ದಲ್ಲಿ ಈ ಅವಕಾಶವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಅಂದಹಾಗೆ ಇದು ಡೆಮೊಗ್ರಫಿಕ್ ಡೇಟಾಗಷ್ಟೇ ಸೀಮಿತವಾಗಿರಲಿದೆ ಎಂದು ಯುಐಡಿಎಐ ತಿಳಿಸಿದೆ.
ಈ ಅಪ್ಡೇಟ್ಗೆ ಆಧಾರ್ ಗ್ರಾಹಕ ಸೇವಾ ಕೇಂದ್ರದಲ್ಲಿ 50 ರೂ. ಶುಲ್ಕ ವಿಧಿಸಲಾಗುತ್ತಿದೆ. ಆದರೆ ಆನ್ಲೈನ್ನಲ್ಲಿ ಉಚಿತವಾಗಿ ಮಾಡಿಕೊಳ್ಳಲು ಅವಕಾಶವಿದ್ದು,ಹತ್ತು ವರ್ಷಗಳ ಹಿಂದೆ ಆಧಾರ್ ಪಡೆದವರು ತಮ್ಮ ಇತ್ತೀಚಿಗಿನ ಗುರುತು, ವಾಸದ ವಿಳಾಸ ಇತ್ಯಾದಿ ಮಾಹಿತಿಗಳನ್ನು ಜೂನ್ 14ರ ಒಳಗೆ ಉಚಿತವಾಗಿ ಅಪ್ಡೇಟ್ ಮಾಡಿಕೊಳ್ಳಬಹುದು.
ಅಲ್ಲದೆ ಡೆಮೊಗ್ರಫಿಕ್ ಡೇಟಾ ಅಂದರೆ, ಹೆಸರು, ವಿಳಾಸ, ಜನ್ಮದಿನಾಂಕ, ಲಿಂಗ, ಮೊಬೈಲ್ಫೋನ್ ನಂಬರ್, ಇ-ಮೇಲ್ ಐಡಿ ವಿವರಗಳನ್ನು ಅಪ್ಡೇಟ್ ಮಾಡಿಕೊಳ್ಳಬಹುದು.
Free Aadhaar update-ಉಚಿತವಾಗಿ ಆಧಾರ್ ಅಪ್ಡೇಟ್ ಮಾಡುವ ಡೈರೆಕ್ಟ್ ಲಿಂಕ್
https://myaadhaar.uidai.gov.in/
ಮೊದಲು ಮುಖಪುಟದಲ್ಲಿರುವ login ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,Captcha type ಮಾಡಿ, send OTP ಮೇಲೆ ಕ್ಲಿಕ್ ಮಾಡಿ
ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Login ಮೇಲೆ ಕ್ಲಿಕ್ ಮಾಡಿ
ನಂತರ Document update ಮೇಲೆ ಕ್ಲಿಕ್ ಮಾಡಿ
ನಂತರ Next ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ Next ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ Next ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ POI ಅಂದರೆ ನಿಮ್ಮ ಗುರುತಿನ ಚೀಟಿಯಾಗಿ ಪ್ಯಾನ್ ಕಾರ್ಡ್ ಅಥವಾ ಯಾವುದಾದರು ಗುರುತಿನ ಚೀಟಿಯನ್ನು ಹಾಗೂ POA ಅಂದರೆ ನಿಮ್ಮ ವಿಳಾಸದ ಪುರಾವೆಯನ್ನು select ಮಾಡಿ ನಿಮ್ಮ passport ಅಥವಾ ಯಾವುದಾದರೂ ವಿಳಾಸದ ಪುರಾವೆಯ ಫೋಟೊವನ್ನು ಅಪ್ಲೋಡ್ ಮಾಡಿ,Next ಮೇಲೆ ಕ್ಲಿಕ್ ಮಾಡಿ
ಸೂಚನೆ:ನೀವು ಅಪ್ಲೋಡ್ ಮಾಡುವ ಫೋಟೊ 2MB ಗಿಂತ ಮೇಲೆ ಇರಬೇಕು.
ನಂತರ Okay ಮೇಲೆ ಕ್ಲಿಕ್ ಮಾಡಿ
ನಂತರ submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ಅಪ್ಡೇಟ್ ಆಗಿ,Success ಎಂದು ತೋರಿಸುತ್ತದೆ.
ನಂತರ Download acknowledgment ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮಗೆ Acknowledgment ದೊರೆಯುತ್ತದೆ
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿದರೆ ನಿಮಗೆ pdf download ಮಾಡಿಕೊಂಡು ನಿಮ್ಮ ಹೆಸರು ಚೆಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿಯು ಜಾರಿಯಾಗಿ ಒಂದು ವರ್ಷ ಪೂರೈಸಿದೆ. ಇದೇ ಸಮಯದಲ್ಲಿ ಇಂಧನ ಇಲಾಖೆಯು ಗೃಹಜ್ಯೋತಿ ಗ್ರಾಹಕರಿಗಾಗಿ ಮನೆ ಬದಲಾಯಿಸಿದ ನಂತರವೂ ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಿದೆ.
ಹಳೆ ಮನೆಯ ಆರ್ಆರ್ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಹೊಸ ಮನೆಯ ಸಂಖ್ಯೆಯನ್ನು ಲಿಂಕ್ ಮಾಡುವ ಮೂಲಕ ಗೃಹಜ್ಯೋತಿ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ಮೊದಲು ಸೇವಾ ಸಿಂಧು ಪೋರ್ಟಲ್ನ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://sevasindhu.karnataka.gov.in/GruhaJyothi_Delink/GetAadhaarData.aspx
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get details ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ, I agree ಮುಂದೆ ಟಿಕ್ ಮಾಡಿ,Mode of authentication OTP ಮೇಲೆ ಕ್ಲಿಕ್ ಮಾಡಿ, ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ Submit ಮೇಲೆ ಕ್ಲಿಕ್ ಮಾಡಿ
ನಂತರ ಡಿಲಿಂಕ್ ಗೆ ಕಾರಣವನ್ನು ಆಯ್ಕೆ ಮಾಡಿ,Declaration ಮುಂದೆ ಕ್ಲಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಡಿಲಿಂಕ್ ಅರ್ಜಿ ಯಶಸ್ವಿಯಾಗಿ Acknowledgment ಬರುತ್ತದೆ,ಅದನ್ನು ಡೌನ್ಲೊಡ್ ಮಾಡಿಕೊಳ್ಳಿ
ನಂತರ ಹೊಸದಾಗಿ ಗೃಹಜ್ಯೋತಿ ಗೆ ಅರ್ಜಿ ಹಾಕಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>
ಮಹಾಶಿವರಾತ್ರಿಯ ದಿನದಂದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಅಡಿಕೆ ವಹಿವಾಟಿನ ಮೇಲೆ ನಿಗಾ ಕೇಂದ್ರೀಕರಿಸಿರುವ ವಾಣಿಜ್ಯ ಇಲಾಖೆಯು ಅಡಿಕೆ ಬೆಳೆಗಾರರ ಮೇಲೆ ಮತ್ತೊಂದು ಅವೈಜ್ಞಾನಿಕ ತೂಗು ಕತ್ತಿ ಇಳಿ ಬಿಟ್ಟಿದೆ. ಅಡಿಕೆ ಬೆಳೆಗಾರರು ತಾವು ಬೆಳೆದ ಅಡಿಕೆಯನ್ನು ವಾಹನಗಳಲ್ಲಿ ಸಾಗಿಸಿ ಮಾರುಕಟ್ಟೆಗೆ ತರಬೇಕಾದರೆ, ಸಾಗಣೆ ಮಾಡುವ ಮೊದಲು ಆನ್ಲೈನಲ್ಲಿ ಇ-ವೇ ಬಿಲ್ (E-Way Bill) ನಮೂದಿಸುವುದು ಕಡ್ಡಾಯ ಮಾಡಲಾಗಿದೆ.
ಈ ಬಗ್ಗೆ ಸಾಮಾನ್ಯ ರೈತರಿಗೆ ಯಾವುದೇ ಮಾಹಿತಿ, ಅರಿವು ನೀಡದೆ ಕಾನೂನು ಜಾರಿ ಮಾಡಿರುವುದು ಅಡಿಕೆ ಬೆಳೆಗಾರರಲ್ಲಿ ಆತಂಕ ಮತ್ತು ಆಕ್ರೋಶ ಸೃಷ್ಟಿಸಿದೆ. ಕಡ್ಡಾಯ ನಿಯಮ ಮಾಡುವ ಮೊದಲು ಇ-ವೇ ಬಿಲ್ ಬಗ್ಗೆ ಒಂದು ಸ್ಪಷ್ಟ ಮಾಹಿತಿಗಳನ್ನು ಸಾಮಾನ್ಯ ರೈತರಿಗೆ ಕೊಡಬೇಕಲ್ವಾ? ಬಿಲ್ ಜನರೇಟ್ ಮಾಡುವುದು ಹೇಗೆ? ಎಲ್ಲಿ ಮಾಡುವುದು? ಲಿಂಕ್ ಯಾವುದು? ಏನೇನ್ ದಾಖಲೆಗಳನ್ನು ಫೀಡ್ ಮಾಡಬೇಕು?...... ಇತ್ಯಾದಿಗಳ ಒಂದು ಬೇಸಿಕ್ ಟ್ರೈನಿಂಗ್ ಮಾಹಿತಿಯ ಪ್ರಕಟಣೆಯನ್ನಾದರೂ ರೈತರಿಗೆ ಕೊಡಬೇಕಲ್ವಾ? ಎಂದು ರೈತರು ಪ್ರಶ್ನೆ ಮಾಡುತ್ತಿದ್ದಾರೆ.
ಇ-ವೇ ಬಿಲ್ನ ತಲೆ ಬುಡ ಗೊತ್ತಿಲ್ಲದ ರೈತರು ಏನು ಮಾಡಬೇಕು?
ಎಲ್ಲಾ ರೈತರ ಬಳಿ ಆಯಂಡ್ರಾಯ್ಡ್ ಫೋನ್ ಇದೆಯಾ? ಎಲ್ಲಾ ಕಡೆ ಇಂಟರ್ನೆಟ್ ಸೌಲಭ್ಯ ಇದೆಯಾ? ಮಂಗ, ಆನೆ, ಕಾಡುಕೋಣಗಳ ಹಾವಳಿಯ ನೆಟ್ವರ್ಕ್ ಬಿಟ್ರೆ ಎಂತಹ ನೆಟ್ವರ್ಕೂ ಮಲೆನಾಡಿನ ರಿಮೋಟ್ ಹಳ್ಳಿಗಳಲ್ಲಿ ಇಲ್ಲ. ರೈತರು ಏನು ಮಾಡಬೇಕು ಎನ್ನುವುದು ರೈತರು ಟವೆಲ್ನಲ್ಲಿ ಬೆವರು ಒರೆಸುತ್ತ ಕೇಳುವ ಪ್ರಶ್ನೆ.
ರಾತ್ರಿ ಹೊತ್ತು ವಾಣಿಜ್ಯ ಇಲಾಖೆಯವರು, ಗ್ರಾಮ ಪಂಚಾಯಿತಿಯವರು ಮಲಗಿದ ಮೇಲೆ, ಕಳ್ಳ ಮಾರ್ಗದಲ್ಲಿ ಮರಳು ಸಾಗಿಸುವ ಹಾಗೆ ರೈತರು ಕದ್ದು ಮುಚ್ಚಿ ಅಡಿಕೆ ಸಾಗಾಣಿಕೆ ಮಾಡಬೇಕಾ? ಪ್ರಾಮಾಣಿಕ ರೈತರೂ ಇನ್ನು ಮುಂದೆ ಕದ್ದು ಮುಚ್ಚಿ ವ್ಯವಹರಿಸಬೇಕಾ? ವಾಣಿಜ್ಯ ಇಲಾಖೆಯ ಭ್ರಷ್ಟ ಅಧಿಕಾರಿಗಳಿಗೆ ಮಾಮೂಲು ವಸೂಲಿಗೆ ರೈತರು ತಾವು ಬೆಳೆದ ಮೂರು ಕಾಸಿನ ಬೆಲೆಯೂ ಇಲ್ಲದಂತಾಗಿರುವ ಗೊರಬಲು ಅಡಿಕೆ, ಸಿಪ್ಪೆ ಗೋಟಿನ ಸಾಗಾಣಿಕೆಯಲ್ಲಿ ಪರ್ಸಂಟೇಜ್ ಎತ್ತಿಡಬೇಕಾ ಎಂದು ಆಕ್ರೋಶದಲ್ಲಿ ರಸ್ತೆ ತಿರುವಿನಲ್ಲಿ ರೈತರು ವಾಣಿಜ್ಯ ಅಧಿಕಾರಿಗಳೊಂದಿಗೆ ಪ್ರತಿಭಟನೆಯ ವಾಗ್ವಾದಕ್ಕಿಳಿದಿದ್ದಾರೆ.
ಸರಕಾರದ ಜನಪ್ರತಿನಿಧಿಗಳು, ಇಲಾಖಾ ಅಧಿಕಾರಿಗಳು ಹೊಟ್ಟೆಗೆ ಏನ್ ತಿಂತಿದಾರೆ, ಏನ್ ಕುಡಿತಿದಾರೆ?, ವಾಸ್ತವದ ಪ್ರಜ್ಞೆ ಇಲ್ವಾ? ಕಾಮನ್ ಸೆನ್ಸ್ ಇಲ್ಲದವರಾಗಿದ್ದಾರಾ? ಮೂರ್ಖರಾಗಿದ್ದಾರಾ ಎಂಬುದು ರೈತರ ಪ್ರಶ್ನೆ. ವಿದೇಶದಿಂದ ಕಳ್ಳ ದಾರಿಯಲ್ಲಿ ಕೋಟಿ ಕೋಟಿ ಮೌಲ್ಯದ ಅಡಿಕೆ ನಿತ್ಯ ಬರ್ತಾ ಇದೆ. ಅದಕ್ಕೆ ಯಾವ ಇ-ವೇ ಬಿಲ್ ನಿಯಂತ್ರಣ ಇಲ್ಲ. ಇಲ್ಲಿ ಬಡ ರೈತನ ಮೂರು ಮುಕ್ಕಾಲು ಕಾಸಿನ ಅಡಿಕೆಗೆ ಇ-ವೇ ಬಿಲ್ ಪ್ರಹಾರ ಯಾವ ನ್ಯಾಯ?
ಇ-ವೇ ಬಿಲ್ ವ್ಯವಸ್ಥೆ ತರುವುದು ಬೇಡ ಅಂತಲ್ಲ. ಮೊದಲು ಅದಕ್ಕೆ ಬೇಕಾಗುವ ಅಗತ್ಯ ಮಾಹಿತಿ ಹಂಚಿಕೆ, ಬೇಸಿಕ್ ತರಬೇತಿ, ಇಂಟರ್ನೆಟ್ ಸೌಲಭ್ಯ, ಕರೆಕ್ಟಾಗಿ ಚಾಲನೆಯಲ್ಲಿರುವ ಸರ್ವರ್ ಇವುಗಳನ್ನೆಲ್ಲ ಕೊಡಬೇಕಲ್ವಾ ಎಂಬುದು ರೈತರು ಸರಕಾರಕ್ಕೆ ಕೇಳುತ್ತಿರುವ ಪ್ರಶ್ನೆ.
ಒಟ್ಟಿನಲ್ಲಿ, ಸರಕಾರಗಳು ಮತ್ತೊಂದು ಆತಂಕದ ತೂಗುಕತ್ತಿಯನ್ನು ಅಡಿಕೆ ಬೆಳೆಗಾರರ ಮೇಲಿಟ್ಟು ಗೊಂದಲ, ವಿವಾದಗಳನ್ನು ನಿರ್ಮಿಸಿದೆ. ರಸ್ತೆ ಬದಿ ಅಡಿಕೆ ತುಂಬಿದ ಗಾಡಿ ನಿಲ್ಲಿಸಿ, ಇ-ವೇ ಬಿಲ್ ಇಲ್ಲದ ರೈತರಿಂದ ಮಾಮೂಲಿ ವಸೂಲಿಯೂ ನಡೆಯುತ್ತಿದೆ.
ಬೇರೆ 'ದಾರಿ ಇಲ್ಲದೆ', ಮಾಮೂಲಿ ಕೊಟ್ಟ ಅಡಿಕೆ ಬೆಳೆಗಾರ, ಸರಕಾರಕ್ಕೆ, ವಸೂಲಿಗಿಳಿದ ದರಿದ್ರ ಅಧಿಕಾರಿಗಳಿಗೆ, ಎಸಿ ರೂಮಿನಲ್ಲಿ ನಿದ್ರೆಯಲ್ಲಿರುವ ಜನ ಪ್ರತಿನಿಧಿಗಳಿಗೆ ಹಿಡಿ ಶಾಪ ಹಾಕಿ, ಉರಿ ಬಿಸಿಲಿನಲ್ಲಿ ಗೊರಬಲು ಅಡಿಕೆ ಮೂಟೆಯೊಂದಿಗೆ ಮಾರುಕಟ್ಟೆಗೆ ಹೋಗಬೇಕಾಗಿದೆ.
]]>ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಆದೇಶ ಮಾಡಿದೆ.
ಜಿಲ್ಲಾ ಟಾಸ್ಕ್ಫೋರ್ಸ್ಗಳ ಶಿಫಾರಸ್ಸಿನಂತೆ ವಿಜಯಪುರ, ಕಲಬುರಗಿ, ಬಾಗಲಕೋಟೆ, ಯಾದಗಿರಿ, ಬೀದರ್, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಬೆಳಗಾವಿ, ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ.
ರೈತಬಾಂಧವರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಬಿಳಿಜೋಳವನ್ನು ಮಾರಾಟ ಮಾಡದೇ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಸರ್ಕಾರದ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.
ಬೆಂಬಲ ಬೆಲೆ ಎಷ್ಟು?
ಹೈಬ್ರಿಡ್ ಜೋಳ ರೂ.3,371/- (ಪ್ರತಿ ಕ್ವಿಂಟಾಲ್ ಗೆ)
ಮಾಲ್ದಂಡಿ ಜೋಳ ರೂ.3,421/- (ಪ್ರತಿ ಕ್ವಿಂಟಾಲ್ಗೆ)
ಪ್ರತಿ ಎಕರೆಗೆ ನಿಗದಿಪಡಿಸಿರುವ ಪ್ರಮಾಣ : 20 ಕ್ವಿಂಟಾಲ್
ಪ್ರತಿ ರೈತರಿಂದ ಖರೀದಿ ಪ್ರಮಾಣ : 150 ಕ್ವಿಂಟಾಲ್
ಮಾರಾಟ ಹೇಗೆ?
ಫೂಟ್ಸ್ ಐ.ಡಿ. ಯೊಂದಿಗೆ ಬಯೋಮೆಟ್ರಿಕ್ ನೀಡಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿ. ಅಧಾರ್ ಜೋಡಣೆಯಾದ ಎನ್.ಸಿ.ಪಿ.ಐ. ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಖಾತರಿಪಡಿಸಿ. ಎಫ್.ಎ.ಕ್ಕೂ ಗುಣಮಟ್ಟದ ಬಗ್ಗೆ ಗ್ರೇಡರ್ ಪರಿಶೀಲಿಸಿ ದೃಢೀಕರಿಸಿದ ನಂತರ ಖರೀದಿ.ಮದ್ಯವರ್ತಿಗಳು ಖರೀದಿ ಕೇಂದ್ರಗಳನ್ನು ದುರ್ಬಳಕೆ ಮಾಡಿಕೊಂಡರೆ ಕಾನೂನು ಕ್ರಮ ಜರುಗಿಸಲಾಗುವುದು.
ಹಣ ಪಾವತಿ ಹೇಗೆ?
ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ಹಣ ನೇರವಾಗಿ ಜಮೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಉಚಿತ ದೂರವಾಣಿ ಸಂಖ್ಯೆಗೆ 1800 425 1552 ಕರೆ ಮಾಡಬಹುದಾಗಿದೆ.
ಮಹಾಶಿವರಾತ್ರಿಯ ದಿನದಂದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರುವರಿ 24,ಸೋಮವಾರ ಪಿಎಂ-ಕಿಸಾನ್(pmkisan) ಯೋಜನೆಯಡಿ 19ನೇ ಕಂತಿನ ₹22 ಸಾವಿರ ಕೋಟಿ ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ. 9.8 ಕೋಟಿ ರೈತರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ವಾರ್ಷಿಕ ₹6 ಸಾವಿರ ನೀಡಲಾಗುತ್ತದೆ.
ಪ್ರತಿ ನಾಲ್ಕು ತಿಂಗಳಿಗೆ ಮೂರು ಬಾರಿ ರೈತರಿಗೆ ₹2 ಸಾವಿರವನ್ನು ನೇರವಾಗಿ(DBT)ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. 18ನೇ ಕಂತಿನಲ್ಲಿ 9.6 ಕೋಟಿ ಇದ್ದ ಫಲಾನುಭವಿಗಳ ಸಂಖ್ಯೆಯು ಈ ಬಾರಿ ಹೆಚ್ಚಳವಾಗಿದೆ. ಸದ್ಯ ಬಿಡುಗಡೆಯಾಗಿರುವ ಮೊತ್ತವು ಸೇರಿದರೆ ಇಲ್ಲಿಯವರೆಗೆ ಈ ಯೋಜನೆಯಡಿ ಬಿಡುಗಡೆಯಾಗಿರುವ ಮೊತ್ತ ₹3.68 ಲಕ್ಷ ಕೋಟಿಯಾಗಿದೆ ಎಂದು ತಿಳಿಸಿದೆ.
ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ-Pmkisan beneficiary status
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಮೊದಲು know your status ಮೇಲೆ ಕ್ಲಿಕ್ ಮಾಡಿ
ನಂತರ know your register number ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ
ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.
ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ
ನಂತರ update your details ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ
Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.
ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ
Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.
FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ ಕಾರಣ ಮತ್ತು ಪರಿಹಾರ
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
fruitspmk.gov.in ಪೋರ್ಟಲ್ ನಲ್ಲಿ |
|||
1 |
ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ |
ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು |
ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ (NIC) ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ. ಆ) ಸಮಸ್ಯಾತ್ಮಕ ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ. |
2 |
ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು |
ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ |
ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ |
3 |
ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು |
ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ |
ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ |
4 |
ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ |
ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ |
OPERATOR ಲಾಗಿನ್ (RSK, ADA office, JDA office) OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು |
5 |
01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ |
ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ |
ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ) |
6 |
Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು |
ಜಿಲ್ಲೆಗಳಲ್ಲಿ OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ |
AAO ಲಾಗಿನ್ (RSK, ADA office, JDA office) AAO ಲಾಗಿನ್ನಲ್ಲಿ ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ, ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
7 |
ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ |
ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ) |
AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ. |
8 |
PFMS rejected |
Aadhaar Number is not seeded in NPCI |
ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ |
Bank Name And IFSC Code are not related to each other |
ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ |
||
Bank Name is not as per PFMS Bank Master. |
|||
Beneficiary is rejected as Account Type is other than SB / SBA / JD |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ) |
||
Duplicate Beneficiary Name , Bank Account No and Bank Name not allowed for same scheme |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
IFSC Code either not present or currently inactive in tbl BankBranch |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
Incorrect Aadhaar Number |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
One or more mandatory tags values are missing. |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
||
Rejected by Bank, Account No does not exist in Bank/INVALID/CLOSED |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
9 |
Amount credited to Account Number-NA |
Aadhaar number based payment by GoI |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ. |
10 |
PAYMENT STOPPED BY STATE |
XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ |
ಕೇಂದ್ರ ಸರ್ಕಾರ |
11 |
Transaction failed |
ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ. |
12 |
ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ |
OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ |
ಕೇಂದ್ರ ಸರ್ಕಾರ |
13 |
ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು |
ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ. |
ಕೇಂದ್ರ ಸರ್ಕಾರ ದ pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ. |
ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರುವರಿ 24,ಸೋಮವಾರ ಪಿಎಂ-ಕಿಸಾನ್(pmkisan) ಯೋಜನೆಯಡಿ 19ನೇ ಕಂತಿನ ₹22 ಸಾವಿರ ಕೋಟಿ ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ. 9.8 ಕೋಟಿ ರೈತರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ವಾರ್ಷಿಕ ₹6 ಸಾವಿರ ನೀಡಲಾಗುತ್ತದೆ.
ಪ್ರತಿ ನಾಲ್ಕು ತಿಂಗಳಿಗೆ ಮೂರು ಬಾರಿ ರೈತರಿಗೆ ₹2 ಸಾವಿರವನ್ನು ನೇರವಾಗಿ(DBT)ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. 18ನೇ ಕಂತಿನಲ್ಲಿ 9.6 ಕೋಟಿ ಇದ್ದ ಫಲಾನುಭವಿಗಳ ಸಂಖ್ಯೆಯು ಈ ಬಾರಿ ಹೆಚ್ಚಳವಾಗಿದೆ. ಸದ್ಯ ಬಿಡುಗಡೆಯಾಗಿರುವ ಮೊತ್ತವು ಸೇರಿದರೆ ಇಲ್ಲಿಯವರೆಗೆ ಈ ಯೋಜನೆಯಡಿ ಬಿಡುಗಡೆಯಾಗಿರುವ ಮೊತ್ತ ₹3.68 ಲಕ್ಷ ಕೋಟಿಯಾಗಿದೆ ಎಂದು ತಿಳಿಸಿದೆ.
ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ-Pmkisan beneficiary status
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಮೊದಲು know your status ಮೇಲೆ ಕ್ಲಿಕ್ ಮಾಡಿ
ನಂತರ know your register number ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ
ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.
ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ
ನಂತರ update your details ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ
Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.
ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ
Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.
FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ ಕಾರಣ ಮತ್ತು ಪರಿಹಾರ
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
fruitspmk.gov.in ಪೋರ್ಟಲ್ ನಲ್ಲಿ |
|||
1 |
ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ |
ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು |
ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ (NIC) ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ. ಆ) ಸಮಸ್ಯಾತ್ಮಕ ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ. |
2 |
ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು |
ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ |
ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ |
3 |
ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು |
ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ |
ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ |
4 |
ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ |
ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ |
OPERATOR ಲಾಗಿನ್ (RSK, ADA office, JDA office) OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು |
5 |
01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ |
ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ |
ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ) |
6 |
Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು |
ಜಿಲ್ಲೆಗಳಲ್ಲಿ OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ |
AAO ಲಾಗಿನ್ (RSK, ADA office, JDA office) AAO ಲಾಗಿನ್ನಲ್ಲಿ ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ, ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
7 |
ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ |
ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ) |
AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ. |
8 |
PFMS rejected |
Aadhaar Number is not seeded in NPCI |
ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ |
Bank Name And IFSC Code are not related to each other |
ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ |
||
Bank Name is not as per PFMS Bank Master. |
|||
Beneficiary is rejected as Account Type is other than SB / SBA / JD |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ) |
||
Duplicate Beneficiary Name , Bank Account No and Bank Name not allowed for same scheme |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
IFSC Code either not present or currently inactive in tbl BankBranch |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
Incorrect Aadhaar Number |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
One or more mandatory tags values are missing. |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
||
Rejected by Bank, Account No does not exist in Bank/INVALID/CLOSED |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
9 |
Amount credited to Account Number-NA |
Aadhaar number based payment by GoI |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ. |
10 |
PAYMENT STOPPED BY STATE |
XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ |
ಕೇಂದ್ರ ಸರ್ಕಾರ |
11 |
Transaction failed |
ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ. |
12 |
ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ |
OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ |
ಕೇಂದ್ರ ಸರ್ಕಾರ |
13 |
ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು |
ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ. |
ಕೇಂದ್ರ ಸರ್ಕಾರ ದ pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ. |
ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರುವರಿ 24,ಸೋಮವಾರ ಪಿಎಂ-ಕಿಸಾನ್(pmkisan) ಯೋಜನೆಯಡಿ 19ನೇ ಕಂತಿನ ₹22 ಸಾವಿರ ಕೋಟಿ ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ. 9.8 ಕೋಟಿ ರೈತರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ವಾರ್ಷಿಕ ₹6 ಸಾವಿರ ನೀಡಲಾಗುತ್ತದೆ.
ಪ್ರತಿ ನಾಲ್ಕು ತಿಂಗಳಿಗೆ ಮೂರು ಬಾರಿ ರೈತರಿಗೆ ₹2 ಸಾವಿರವನ್ನು ನೇರವಾಗಿ(DBT)ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. 18ನೇ ಕಂತಿನಲ್ಲಿ 9.6 ಕೋಟಿ ಇದ್ದ ಫಲಾನುಭವಿಗಳ ಸಂಖ್ಯೆಯು ಈ ಬಾರಿ ಹೆಚ್ಚಳವಾಗಿದೆ. ಸದ್ಯ ಬಿಡುಗಡೆಯಾಗಿರುವ ಮೊತ್ತವು ಸೇರಿದರೆ ಇಲ್ಲಿಯವರೆಗೆ ಈ ಯೋಜನೆಯಡಿ ಬಿಡುಗಡೆಯಾಗಿರುವ ಮೊತ್ತ ₹3.68 ಲಕ್ಷ ಕೋಟಿಯಾಗಿದೆ ಎಂದು ತಿಳಿಸಿದೆ.
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಕರ್ನಾಟಕ ರೈತ ಸುರಕ್ಷಾ - ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ(Pardan mantri fasal Bheema Yojana)
2023-24: 25.03 ಲಕ್ಷ ರೈತರು 20.53 ಲಕ್ಷ ಹೆಕ್ಟೇರ್ನಲ್ಲಿ ನೋಂದಾಯಿಸಿ, ₹2019.69 ಕೋಟಿ ಪರಿಹಾರ ಪಡೆದಿದ್ದಾರೆ!
ಹಿಂದಿನ ವರ್ಷಗಳಲ್ಲಿ 22,572 ರೈತರಿಗೆ ₹286.89 ಕೋಟಿ ಪರಿಹಾರ ನೀಡಲಾಗಿದೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರುವರಿ 24,ಸೋಮವಾರ ಪಿಎಂ-ಕಿಸಾನ್(pmkisan) ಯೋಜನೆಯಡಿ 19ನೇ ಕಂತಿನ ₹22 ಸಾವಿರ ಕೋಟಿ ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ. 9.8 ಕೋಟಿ ರೈತರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ವಾರ್ಷಿಕ ₹6 ಸಾವಿರ ನೀಡಲಾಗುತ್ತದೆ.
ಪ್ರತಿ ನಾಲ್ಕು ತಿಂಗಳಿಗೆ ಮೂರು ಬಾರಿ ರೈತರಿಗೆ ₹2 ಸಾವಿರವನ್ನು ನೇರವಾಗಿ(DBT)ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. 18ನೇ ಕಂತಿನಲ್ಲಿ 9.6 ಕೋಟಿ ಇದ್ದ ಫಲಾನುಭವಿಗಳ ಸಂಖ್ಯೆಯು ಈ ಬಾರಿ ಹೆಚ್ಚಳವಾಗಿದೆ. ಸದ್ಯ ಬಿಡುಗಡೆಯಾಗಿರುವ ಮೊತ್ತವು ಸೇರಿದರೆ ಇಲ್ಲಿಯವರೆಗೆ ಈ ಯೋಜನೆಯಡಿ ಬಿಡುಗಡೆಯಾಗಿರುವ ಮೊತ್ತ ₹3.68 ಲಕ್ಷ ಕೋಟಿಯಾಗಿದೆ ಎಂದು ತಿಳಿಸಿದೆ.
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>ಅನ್ನಭಾಗ್ಯ ಯೋಜನೆಯಡಿ ಪಡಿತರ ಫಲಾನುಭವಿಗಳಿಗೆ ನೀಡುತ್ತಿರುವ ನೇರ ನಗದು ವರ್ಗಾವಣೆ ಯೋಜನೆಯಡಿ ನೀಡುತ್ತಿರುವ ಹಣದ ಬದಲಾಗಿ 5 ಕೆಜಿ ಅಕ್ಕಿಯನ್ನು ಇನ್ಮುಂದೆ ವಿತರಿಸುವುದಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ.
ಈ ಬಗ್ಗೆ ಆಹಾರ, ನಾಗರರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 05 ಕೆ.ಜಿ, ಆಹಾರ ಧಾನದೊಂದಿಗೆ, ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 05 ಕೆ.ಜಿ, ಆಹಾರ ಧಾನ್ಯವನ್ನು ಸೇರಿಸಿ, ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆ.ಜಿ, ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿರುತ್ತದೆ ಎಂದಿದ್ದಾರೆ.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 10ಕೆಜಿ ಅನ್ನಭಾಗ್ಯ ಅಕ್ಕಿ(Annabhagya)
ಯಜಮಾನಿಯರಿಗೆ ಸಚಿವೆ ಲಕ್ಷ್ಮೀ
ಹೆಬ್ಬಾಳ್ಳರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ 8-10 ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ 8-10 ದಿನಗಳಲ್ಲಿ ಗೃಹ ಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಲಾಗುವುದು.
ನನಗೆ ಅಪಘಾತವಾಗಿ 40 ದಿನ ಆಸ್ಪತ್ರೆಯಲ್ಲಿ ಇದ್ದ ಕಾರಣ ಗೃಹ ಲಕ್ಷ್ಮಿ ಹಣ ಖಾತೆಗೆ ಹಾಕುವ ಪ್ರಕ್ರಿಯೆ ವಿಳಂಬವಾಗಿದೆ. ಇಷ್ಟು ದಿನ ವಿಳಂಬವಾಗಿದ್ದ ಹಣವನ್ನು 8-10 ದಿನದೊಳಗೆ ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಗೃಹ ಲಕ್ಷ್ಮಿ ಹಣವನ್ನು ಹೊಸ ಪ್ಯಾಟರ್ನ್ ಮೂಲಕ ಹಾಕಲಾಗುತ್ತಿದೆ. ಬೆಂಗಳೂರು ಸುತ್ತಮುತ್ತಲ 5 ತಾಲೂಕು ಪಂಚಾಯಿತಿಗಳಿಗೆ ದುಡ್ಡು ಹಾಕಿದ್ದೇವೆ. ಅಲ್ಲಿಂದ ಸಿಡಿಪಿಒ ಮೂಲಕ ಹಣ ಬಿಡುಗಡೆ ಮಾಡಲಾಗಿದೆ. ಇನ್ನೂ ಸರಿಯಾಗಿ ಒಂದು ವಾರ, 10 ದಿನದೊಳಗೆ ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಿದಾರೆ.
https://ahara.kar.nic.in/Home/EServices
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ e-Ration Card ಮೇಲೆ ಕ್ಲಿಕ್ ಮಾಡಿ
ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ ಮೇಲೆ ಕ್ಲಿಕ್ ಮಾಡಿ,Go ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ರದ್ದಾದ ರೇಷನ್ ಕಾರ್ಡ್ ಪಟ್ಟಿ ದೊರೆಯಲಿದೆ
]]>
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಕೂಡಲೇ ಜನರ ಖಾತೆಗೆ ಜಮೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬುದು ನನ್ನ ಗಮನದಲ್ಲಿದೆ.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ರೂ. 2000/- ಮೊತ್ತದ ತರಕಾರಿ ಬೀಜಗಳ ಕಿಟ್ನ್ನು ವಿತರಣೆ ಮಾಡಲಾಗುತ್ತಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಆಧಾರ್ಕಾರ್ಡ್ ಜೇರಾಕ್ಸ್, ಬ್ಯಾಂಕ್ ಪಾಸ್ ಬುಕ್ ಜೇರಾಕ್ಸ್, ಜಾತಿ ಪ್ರಮಾಣ ಪತ್ರ(ಪ.ಜಾ/ಪ.ಪಂ.ದವರಿಗೆ ಮಾತ್ರ) ಗಳನ್ನು ಸಲ್ಲಿಸಿ ಫೆ. 11 ರಿಂದ ತರಕಾರಿ ಬೀಜಗಳ ಕಿಟ್ನ್ನು ಪಡೆಯುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Horticulture-department-schemes
ತೋಟಗಾರಿಕೆ ಇಲಾಖೆಯಿಂದ(Horticulture department schemes) ಸಣ್ಣ ಟ್ರ್ಯಾಕ್ಟರ್(Mini tractor)
• ಡ್ರಾಗನ್ ಪೂಟ್(Dragon fruit), ಈರುಳ್ಳಿ ಶೇಖರಣಾ ಘಟಕಕ್ಕೆ (Onion storage)ಸಹಾಯಧನ
• ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ(green house) ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ ನೀರುಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಲ್ಲಿ ಅರ್ಜಿ ಸಲ್ಲಿಸಬೇಕು
ಆಸಕ್ತ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ (Horticulture department)ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ಅರ್ಜಿದಾರರ ಅಧಾರ್ ಕಾರ್ಡ್ ಪ್ರತಿ.
• ಬ್ಯಾಂಕ್ ಪಾಸ್ ಬುಕ್ ಪ್ರತಿ.
• ಪೋಟೋ.
• ಪಹಣಿ/ಉತಾರ್/RTC.
ರೇಷನ್ ಕಾರ್ಡ ಪ್ರತಿ.
ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.
ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM);
ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(Pradna mantri krishi sinchayi yojane);
ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ(drip irrigation) ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್ರವರೆಗೆ ಶೇಕಡಾ 90%) ಸಹಾಯಧನ.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ (NAREGA)ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ(PMKVY) ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ(NHM) ಸಮುದಾಯ ಕೃಷಿಹೊಂಡ(Farm pond), ಕೃಷಿಹೊಂಡ, ಪ್ಯಾಕ್ಹೌಸ್(Pack house), ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) (Fiber doti)ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್ (Aadhaar card) ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ
https://horticulturedir.karnataka.gov.in/info-2/Facilities+available+to+farmers/kn
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಕಚೇರಿಯನ್ನು
ಸಂಪರ್ಕಿಸುವುದು.
ಕೇಂದ್ರ ಸರ್ಕಾರ ಇತ್ತೀಚೆಗೆ ವಿಧವಾ ಪಿಂಚಣಿ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ, ಇದು ಲಕ್ಷಾಂತರ ಮಹಿಳೆಯರಿಗೆ ಪರಿಹಾರವನ್ನು ತರುತ್ತದೆ. ಈ ಹೆಚ್ಚಳದೊಂದಿಗೆ, ಪಿಂಚಣಿ ಮೊತ್ತವನ್ನು ಗಮನಾರ್ಹವಾಗಿ ಹೆಚ್ಚಿಸಲಾಗಿದ್ದು, ಇದರಿಂದಾಗಿ ಮಹಿಳೆಯರು ಉತ್ತಮ ಆರ್ಥಿಕ ಸಹಾಯವನ್ನು ಪಡೆಯಬಹುದು.
ವಿಧವಾ ಪಿಂಚಣಿ ಯೋಜನೆಯಡಿಯಲ್ಲಿ ಪಡೆಯುವ ಮೊತ್ತವನ್ನು ಮಹತ್ತರವಾಗಿ ಹೆಚ್ಚಿಸಲಾಗಿದೆ. ಮೊದಲು ಈ ಯೋಜನೆಯಲ್ಲಿ ತಿಂಗಳಿಗೆ 500 ರಿಂದ 1000 ರೂಪಾಯಿಗಳವರೆಗೆ ಸಿಗುತ್ತಿತ್ತು ಆದರೆ ಈಗ ಅದನ್ನು ತಿಂಗಳಿಗೆ 2000 ರಿಂದ 3000 ಕ್ಕೆ ಹೆಚ್ಚಿಸಲಾಗಿದೆ. ಇದರರ್ಥ ಮಹಿಳೆಯರು ಮೊದಲಿಗಿಂತ ಹೆಚ್ಚಿನ ಆರ್ಥಿಕ ಸಹಾಯವನ್ನು ಪಡೆಯಲು ಸಾಧ್ಯವಾಗುತ್ತದೆ, ಆದರೂ ಪ್ರತಿ ರಾಜ್ಯ ಸರ್ಕಾರವನ್ನು ಅವಲಂಬಿಸಿ ಮೊತ್ತವು ಸ್ವಲ್ಪ ಬದಲಾಗಬಹುದು. ಆದರೆ ಕೇಂದ್ರ ಸರ್ಕಾರದ ಶಿಫಾರಸಿನ ನಂತರ, ಇದನ್ನು ಅನೇಕ ರಾಜ್ಯಗಳಲ್ಲಿ ಜಾರಿಗೆ ತರಲಾಗಿದ್ದು, ಇದು ಮಹಿಳೆಯರ ಜೀವನವನ್ನು ಸ್ವಲ್ಪ ಸುಲಭಗೊಳಿಸುತ್ತದೆ.
ಪ್ರಮುಖ ಬದಲಾವಣೆಗಳು
ಪಿಂಚಣಿ ಮೊತ್ತ ₹1000 ದಿಂದ ₹2000 ಕ್ಕೆ ಏರಿಕೆ.
ಈಗ ನೀವು ಪ್ರತಿ ತಿಂಗಳು ₹2000 ರಿಂದ ₹3000 ಪಡೆಯುತ್ತೀರಿ.
ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ನಿಯಮಗಳು.
ಈ ಯೋಜನೆಯ ಲಾಭವನ್ನು ಯಾರು ಪಡೆಯಬಹುದು
ಮಹಿಳೆಯ ವಯಸ್ಸು 18 ವರ್ಷಗಳು ಆಗಿರಬೇಕು.
ಮಹಿಳೆಯ ವಾರ್ಷಿಕ ಆದಾಯವು ಸರ್ಕಾರ ನಿಗದಿಪಡಿಸಿದ ಮಿತಿಗಿಂತ ಕಡಿಮೆಯಿರಬೇಕು.
ಮಹಿಳೆಗೆ ಬೇರೆ ಯಾವುದೇ ಸರ್ಕಾರಿ ಪಿಂಚಣಿ ಯೋಜನೆಯ ಲಾಭ ಸಿಗಬಾರದು
ಮಹಿಳೆಯ ಹೆಸರಿನಲ್ಲಿ ಯಾವುದೇ ದೊಡ್ಡ ಆಸ್ತಿ ಅಥವಾ ಕೃಷಿ ಭೂಮಿ ಇರಬಾರದು.
ಈ ಷರತ್ತುಗಳನ್ನು ಪೂರೈಸುವ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬಹುದು.
ಪತಿಯ ಮರಣದ ನಂತರ ಆರ್ಥಿಕವಾಗಿ ದುರ್ಬಲರಾಗಿರುವ ಮತ್ತು ಉತ್ತಮ ಜೀವನ ನಡೆಸಲು ಸಹಾಯ ಬಯಸುವ ಮಹಿಳೆಯರಿಗಾಗಿ ಈ ಯೋಜನೆ ಇದೆ.
ಅರ್ಜಿ ಸಲ್ಲಿಸುವುದು ಹೇಗೆ
ನೀವು ಈ ಯೋಜನೆಯ ಲಾಭ ಪಡೆಯಲು ಬಯಸಿದರೆ, ಅರ್ಜಿ ಸಲ್ಲಿಸುವುದು ತುಂಬಾ ಸುಲಭ. ನೀವು ಆನ್ಲೈನ್ ಮತ್ತು ಆಫ್ಲೈನ್ ಎರಡರಲ್ಲೂ ಅರ್ಜಿ ಸಲ್ಲಿಸಬಹುದು.
ರಾಜ್ಯಗಳಾದ್ಯಂತ ಪಿಂಚಣಿ ಮೊತ್ತ
ದೇಶದ ವಿವಿಧ ರಾಜ್ಯಗಳಲ್ಲಿ ಪಿಂಚಣಿ ಮೊತ್ತವು ಬದಲಾಗಬಹುದು. ಕೆಲವು ರಾಜ್ಯಗಳ ಪಿಂಚಣಿ ಮೊತ್ತದ ಬಗ್ಗೆ ಇಲ್ಲಿದೆ ಮಾಹಿತಿ
ರಾಜ್ಯ ಹಿಂದಿನ ಮೊತ್ತ (₹) ಹೊಸ ಮೊತ್ತ (₹)
ಉತ್ತರ ಪ್ರದೇಶ 500 1500₹
ಬಿಹಾರ 600 2000₹
ರಾಜಸ್ಥಾನ 750 2500₹
ಮಧ್ಯಪ್ರದೇಶ 1000 3000₹
ಹರಿಯಾಣ 1200 2500₹
ಮಹಾರಾಷ್ಟ್ರ 800 2000₹
ಕರ್ನಾಟಕ 900 2200₹
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://dssp.karnataka.gov.in/dssp/villageWise_list_Of_beneficiaries.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಅಥವಾ ಪಟ್ಟಣ select ಮಾಡಿ, ಹೊಬಳಿ,ಗ್ರಾಮ select ಮಾಡಿ,Captch type ಮಾಡಿ, Search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿ ಪಿಂಚಣಿ ಪಡೆಯುವವರ ಹೆಸರು ಸಿಗಲಿದೆ
(ಸೂಚನೆ-Desktop mode open ಮಾಡಿಕೊಳ್ಳಿ)
Pension status-ಈ ತಿಂಗಳ ನಿಮ್ಮ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://dssp.karnataka.gov.in/dssp/Beneficiary_Status.aspx
ನಂತರ ನಿಮ್ಮ ಗ್ರಾಮದ ಪಟ್ಟಿಯಲ್ಲಿ ನಿಮ್ಮ beneficiary ID ಹಾಕಿ,captcha type ಮಾಡಿ search ಮೇಲೆ ಕ್ಲಿಕ್ ಮಾಡಿ
ನಂತರ click here to get payment details from SSP portal ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ beneficiary ID ಹಾಗೂ captcha code ಹಾಕಿ search ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ಇಲ್ಲಿಯವರೆಗೆ ಜಮಾ ಆದ ಪಿಂಚಣೆ ಹಣ ಮಾಹಿತಿ ದೊರೆಯಲಿದೆ
ಹೀಗೂ ಚೆಕ್ ಮಾಡಬಹುದು
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ pension ಮೇಲೆ ಕ್ಲಿಕ್ ಮಾಡಿ
ನಂತರ ಇಲ್ಲಿಯವರೆಗೂ ಜಮಾ ಆದ ಪಿಂಚಣೆ ಹಣ(pension amount)ಮಾಹಿತಿ ಸಿಗಲಿದೆ.
]]>ಅನ್ನಭಾಗ್ಯ ಯೋಜನೆಯಡಿ ಪಡಿತರ ಫಲಾನುಭವಿಗಳಿಗೆ ನೀಡುತ್ತಿರುವ ನೇರ ನಗದು ವರ್ಗಾವಣೆ ಯೋಜನೆಯಡಿ ನೀಡುತ್ತಿರುವ ಹಣದ ಬದಲಾಗಿ 5 ಕೆಜಿ ಅಕ್ಕಿಯನ್ನು ಇನ್ಮುಂದೆ ವಿತರಿಸುವುದಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ.
ಈ ಬಗ್ಗೆ ಆಹಾರ, ನಾಗರರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 05 ಕೆ.ಜಿ, ಆಹಾರ ಧಾನದೊಂದಿಗೆ, ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 05 ಕೆ.ಜಿ, ಆಹಾರ ಧಾನ್ಯವನ್ನು ಸೇರಿಸಿ, ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆ.ಜಿ, ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿರುತ್ತದೆ ಎಂದಿದ್ದಾರೆ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ(e-status) ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ(DBT status) ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ಸೂಚನೆ-ಜಿಲ್ಲೆ select ಮಾಡುವಾಗ ತಪ್ಪಾಗಿ ಬೇರೆ ಜಿಲ್ಲೆ select ಮಾಡಿದರೆ ಈ ಕೆಳಗಿನಂತೆ No data found ಎಂದು ತೋರಿಸುತ್ತದೆ. ಅದಕ್ಕಾಗಿ ಸರಿಯಾದ ಜಿಲ್ಲೆಯನ್ನು select ಮಾಡಿ)
ನಂತರ ನೇರ ನಗದು ವರ್ಗಾವಣೆ ಸ್ಥಿತಿ (Status of DBT) ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್(Ration card number) ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ (Annabhagya amount)ಮೊತ್ತವನ್ನು ತೋರಿಸುತ್ತದೆ
ಹೀಗೂ ಚೆಕ್ ಮಾಡಬಹುದು
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಅನ್ನಭಾಗ್ಯ(Annabhagya)ಮೇಲೆ ಕ್ಲಿಕ್ ಮಾಡಿ
ನಂತರ ಇಲ್ಲಿಯವರೆಗೂ ಜಮಾ ಆದ ಅನ್ನಭಾಗ್ಯ ಹಣ(Annabhagya amount)ಮಾಹಿತಿ ಸಿಗಲಿದೆ.
]]>2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
2023ರ ಮುಂಗಾರು ಹಂಗಾಮಿನಲ್ಲಿ ತೊಗರಿ ನೆಟೆರೋಗದಿಂದ ನಷ್ಟಗೊಂಡ ರಾಜ್ಯದ ರೈತರಿಗೆ ಸರ್ಕಾರವು ₹233 ಕೋಟಿ ಪರಿಹಾರ ವಿತರಿಸಿದೆ. ಕಲಬುರಗಿ, ಯಾದಗಿರಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ರೈತರಿಗೆ ಈ ಸಹಾಯ ಲಭ್ಯವಾಗಿದ್ದು, ಕೃಷಿ ಚಟುವಟಿಕೆ ಪುನಶ್ಚೇತನಗೊಳ್ಳಲು ಇದು ಮಹತ್ವದ ಹೆಜ್ಜೆಯಾಗಿದೆ.
ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ದೆಹಲಿ ಚುನಾವಣೆಗೂ ಮೊದಲು ಜನೇವರಿ ಕೊನೆಯ ವಾರ ಅಥವಾ ಫೆಬ್ರುವರಿ ಮೊದಲ ವಾರ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>
ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.
ಏನಿದು ಫ್ರೂಟ್ಸ್ ನಂಬರ್
ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.
ನಿಮ್ಮ FID ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.
ಏಕೆ ನೋಂದಾಯಿಸಬೇಕು?
ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್ ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ
ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.
ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.
ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು
]]>2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
2023ರ ಮುಂಗಾರು ಹಂಗಾಮಿನಲ್ಲಿ ತೊಗರಿ ನೆಟೆರೋಗದಿಂದ ನಷ್ಟಗೊಂಡ ರಾಜ್ಯದ ರೈತರಿಗೆ ಸರ್ಕಾರವು ₹233 ಕೋಟಿ ಪರಿಹಾರ ವಿತರಿಸಿದೆ. ಕಲಬುರಗಿ, ಯಾದಗಿರಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ರೈತರಿಗೆ ಈ ಸಹಾಯ ಲಭ್ಯವಾಗಿದ್ದು, ಕೃಷಿ ಚಟುವಟಿಕೆ ಪುನಶ್ಚೇತನಗೊಳ್ಳಲು ಇದು ಮಹತ್ವದ ಹೆಜ್ಜೆಯಾಗಿದೆ.
ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)
1.ಅಶ್ವಿನಿ-
ದಿನಾಂಕ-14-4-2025
ಸಾಮಾನ್ಯ ಮಳೆ
ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,
2.ಭರಣಿ
ದಿನಾಂಕ-28-4-2025
ಸಾಮಾನ್ಯ ಮಳೆ
ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು
3.ಕೃತಿಕಾ
ದಿನಾಂಕ-11-5-2025
ಸಾಮಾನ್ಯ ಮಳೆ
ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು
4.ರೋಹಿಣಿ-
ದಿನಾಂಕ-25-5-2025
ಉತ್ತಮ ಮಳೆ
ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು
5.ಮೃಗಶಿರ
ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ
ಉತ್ತಮ ಮಳೆ
ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು
6.ಆರಿದ್ರಾ
ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)
ಉತ್ತಮ ಮಳೆ
ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.
7.ಪುನರ್ವಸು
ದಿನಾಂಕ-6-7-2025
ಉತ್ತಮ ಮಳೆ
ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು.
8.ಪುಷ್ಯ
ದಿನಾಂಕ-20-7-2025
ಉತ್ತಮ ಮಳೆ
ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ) ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.
9.ಆಶ್ಲೇಷ
ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ
ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು
10.ಮಘ
ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ
ಉತ್ತಮ ಮಳೆ
ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.
11.ಹುಬ್ಬ
ದಿನಾಂಕ-31-8-2025
ಉತ್ತಮ ಮಳೆ
ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ. ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ
12.ಉತ್ತರ
ದಿನಾಂಕ-13-09-2025
ಉತ್ತಮ ಮಳೆ
ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ
13.ಹಸ್ತ
ದಿನಾಂಕ-27-9-2025
ಉತ್ತಮ ಮಳೆ
14.ಚಿತ್ತ
ದಿನಾಂಕ-11-10-2025
ಉತ್ತಮ ಮಳೆ
ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.
15.ಸ್ವಾತಿ
ದಿನಾಂಕ-24-10-2025
ಉತ್ತಮ ಮಳೆ
ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.
16.ವಿಶಾಖ
ದಿನಾಂಕ-6-11-2025
ಉತ್ತಮ ಮಳೆ
ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.
ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.
https://krushirushi.in/contact-us
ಇಂತಿ ನಿಮ್ಮ
ಶಿವನಗೌಡ ಪಾಟೀಲ
M.Sc(ಕೃಷಿ), ಕೀಟಶಾಸ್ತ್ರ
]]>ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಕೂಡಲೇ ಜನರ ಖಾತೆಗೆ ಜಮೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬುದು ನನ್ನ ಗಮನದಲ್ಲಿದೆ.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಭಗವಾನ್ ಬಾಲರಾಮನ ದರ್ಶನ ಬಯಸುವ ಭಕ್ತರಿಗೆ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ವೆಬ್ಸೈಟ್ನಲ್ಲಿ ನಿರ್ದಿಷ್ಟ ಸಮಯದ ಸ್ಲಾಟ್ಗಳನ್ನು ಒದಗಿಸಿದೆ. ಇದರಂತೆ ನಿತ್ಯ ಬೆಳಿಗ್ಗೆ 6 ರಿಂದ 11:30 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 9 ರವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರಲಿದೆ.ಆನ್ಲೈನ್ ಮೂಲಕ ಬುಕ್ಕಿಂಗ್ ಮಾಡಿದರೆ ಕಿಲೊಮಿಟರ್ ಗಟ್ಟಲೇ ಸಾಲಿನಲ್ಲ ಕಾಯದೆ ಕೇವಲ 5 ರಿಂದ 10 ನಿಮಿಷದಲ್ಲಿ ಅಯೊದ್ಯಾ ರಾಮ ಮಂದಿರ ದರ್ಶನ ಮಾಡಬಹುದು.
ಆರತಿಗೂ ಸಹ ಬುಕ್ಕಿಂಗ್ ಮಾಡಬಹುದು
ಬೆಳಗ್ಗೆ ಬಾಲರಾಮನ ಆರತಿ ಸಮಯ 6.30ಕ್ಕೆ ಇದ್ದು, ಜಾಗರಣ/ ಶೃಂಗಾರ ಎಂದು ನಮೂದಿಸಲಾಗಿದೆ. ಸಂಜೆ 7:30 ಕ್ಕೆ ಸಂಧ್ಯಾ ಆರತಿಯನ್ನು ಒಳಗೊಂಡಿದೆ. ಆಫ್ಲೈನ್ ಮತ್ತು ಆನ್ಲೈನ್ ಎರಡರಲ್ಲೂ 'ಆರತಿ' ಗಾಗಿ ಪಾಸ್ಗಳನ್ನು ಪಡೆಯಬಹುದು. ಆಫ್ಲೈನ್ ಪಾಸ್ಗಳು ಶ್ರೀ ರಾಮ ಜನ್ಮಭೂಮಿಯ ಶಿಬಿರ ಕಚೇರಿಯಲ್ಲಿ ಲಭ್ಯವಿದ್ದು, ಮಾನ್ಯ ಸರ್ಕಾರಿ ಗುರುತಿನ ಪುರಾವೆ ಒದಗಿಸುವ ಅಗತ್ಯವಿದೆ.
ಆನ್ಲೈಲ್ ಬುಕ್ಕಿಂಗ್ ಹೀಗೆ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ click here to"Reserve your free passes for experiencing Aarti and Darshana of Ramalalla"
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ Free Sugama Darshana ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ,Get OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Login ಮೇಲೆ ಕ್ಲಿಕ್ ಮಾಡಿ
ನಂತರ Select Devotees ಮೇಲೆ ಕ್ಲಿಕ್ ಮಾಡಿ,ನೀವು ಎಷ್ಟು ಜನ ದರ್ಶನ ಮಾಡಲು ಹೊಗುತ್ತಿದ್ದೀರಾ, ಅಷ್ಟು ಸಂಖ್ಯೆಯನ್ನು Select ಮಾಡಿ
ನಂತರ ನೀವು ದರ್ಶನ ಮಾಡಲು ಬಯಸುವ ದಿನಾಂಕವನ್ನು Select ಮಾಡಿ
ನಂತರ ದರ್ಶನದ ಸಮಯವನ್ನು select ಮಾಡಿ,Proceed ಮೇಲೆ ಕ್ಲಿಕ್ ಮಾಡಿ
(ಸೂಚನೆ-ನೀವು ದರ್ಶನ ಮಾಡುವ ದಿನಾಂಕದಿಂದ 15 ದಿನ ಮೊದಲೇ ಬುಕ್ಕಿಂಗ್ ಗೆ ಅವಕಾಶ ಇರುತ್ತದೆ.ರಾತ್ರಿ 12 ಗಂಟೆಯಿಂದ 1 ಗಂಟೆಯೊಳಗಡೆ ಬುಕ್ ಮಾಡುವವರಿಗೆ ಮಾತ್ರ ಅವಕಾಶ ಸಿಗಲಿದೆ)
ನಂತರ ನಿಮ್ಮ ವಯಕ್ತಿಕ ಮಾಹಿತಿಯನ್ನು ತುಂಬಿ(ಹೆಸರು,ವಯಸ್ಸು,ಲಿಂಗ,ಆಧಾರ್ ನಂಬರ್ ಹಾಕಿ), ಒಬ್ಬ ವ್ಯಕ್ತಿಯ passport size photo ಅಪ್ಲೊಡ್ ಮಾಡಿ,ಈ ಕೆಳಗಿನಂತೆ ನಿಮ್ಮ Free pass ಡೌನ್ಲೊಡ್ ಮಾಡಿಕೊಂಡು,ಅದನ್ನು ದೇವಸ್ಥಾನ ಪ್ರವೇಶಿಸುವ ಮೊದಲು ತೋರಿಸಿದರೆ ನಿಮಗೆ ಉಚಿತವಾಗಿ ಕೇವಲ 5 ರಿಂದ 10 ನಿಮಿಷದಲ್ಲಿ ಸುಗಮ ದರ್ಶನವಾಗಲಿದೆ.
(ಸೂಚನೆ-ವಯಸ್ಸಾದವರಿಗೆ ವಿಲ್ ಚೇರ್ ಸೌಲಭ್ಯವಿದ್ದು,ಬುಕ್ಕಿಂಗ್ ಮಾಡುವಾಗ select ಮಾಡಿದರೆ,150 ರೂಪಾಯಿಗೆ ವಿಲ್ ಚೇರ್ ದುಡಿಕೊಂಡು ಹೊಗಲು ಒಬ್ಬ ಸಹಾಯಕರನ್ನು ಒದಗಿಸುತ್ತಾರೆ)
ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಪ್ರಧಾನ ಮಂತ್ರಿ ಫಸಲ್ ಭೀಮಾ(Pradan mantri fasal bheema yojana) ಯೋಜನೆಯಡಿ 2023-24 ನೇ ಸಾಲಿನ ಮುಂಗಾರು(Kharif), ಹಿಂಗಾರು(Rabi) ಮತ್ತು ಬೇಸಿಗೆ(Summer) ಹಂಗಾಮುಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ, ಬೆಳೆ ಸಮೀಕ್ಷೆಯ(crop survey) ದತ್ತಾಂಶಗಳನ್ನು ಬೆಳೆ ನೋಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗಳನ್ನು ಅಳವಡಿಸಿ ತಾಳೆಯಾದ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾಂಶದಲ್ಲಿ ವಿಮಾ ಪರಿಹಾರ ಲೆಕ್ಕಹಾಕಲಾಗಿದೆ.
ತಾಳೆಯಾಗದೆ ಇರುವ ಪ್ರಸ್ತಾವನೆಗಳನ್ನು ಉಲ್ಲೇಖಿತ ಸರ್ಕಾರದ ಆದೇಶದಂತೆ ಸಂಬಂಧಪಟ್ಟ ತಾಲ್ಲೂಕು (ಕೃಷಿ/ತೋಟಗಾರಿಕೆ/ಬ್ಯಾಂಕ್) ಮಟ್ಟದ ಅಧಿಕಾರಿಗಳಿಗೆ ಪರಿಶೀಲಿಸಲು ಸಂರಕ್ಷಣೆ ತಂತ್ರಾಂಶದ ಮೂಲಕ ಕಳುಹಿಸಲಾಗಿತ್ತು. ತಾಲ್ಲೂಕು ಮಟ್ಟದ ಅಧಿಕಾರಿಗಳು ಸದರಿ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆಯಲ್ಲಿ ದಾಖಲಾದ ಛಾಯಚಿತ್ರದೊಂದಿಗೆ ಪರಿಶೀಲಿಸಿ ಸಂಬಂಧಪಟ್ಟ ವಿಮಾ ಸಂಸ್ಥೆಯವರಿಗೆ Accept ಅಥವಾ Reject ಮಾಡಲು ಶಿಫಾರಸ್ಸು ಮಾಡಿರುತ್ತಾರೆ, ತದನಂತರ ವಿಮಾ ಸಂಸ್ಥೆಯವರು ಪ್ರಸ್ತಾವನೆಗಳನ್ನು ಮರುಪರಿಶೀಲಿಸಿ ಅಂತಿಮವಾಗಿ Accept ಅಥವಾ Reject ಮಾಡಿರುತ್ತಾರೆ.
ಪ್ರಸ್ತುತ ಸಂರಕ್ಷಣೆ ತಂತ್ರಾಂಶದನ್ವಯ ಮುಂಗಾರು ಹಂಗಾಮಿನಲ್ಲಿ Reject ಆದ 5356 ಪುಸ್ತಾವನೆಗಳು, ಹಿಂಗಾರು ಹಂಗಾಮಿನಲ್ಲಿ Reject ಆದ 2763 ಪ್ರಸ್ತಾವನೆಗಳು ಮತ್ತು ಬೇಸಿಗೆ ಹಂಗಾಮಿನಲ್ಲಿ 4 ಪ್ರಸ್ತಾವನೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಪ್ರಸ್ತುತ ತಿರಸ್ಕೃತಗೊಂಡ(Crop insurance rejected list)ಪ್ರಸ್ತಾವನೆಗಳ ಕುರಿತು ತಾಲ್ಲೂಕು/ಹೋಬಳಿ ಮಟ್ಟದಲ್ಲಿ ರೈತರಿಗೆ ಮಾಹಿತಿಯನ್ನು ನೀಡಲು ಸೂಚಿಸಿದೆ ಹಾಗೂ ಸದರಿ ಪಟ್ಟಿಯನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ ಮತ್ತು ಜಿಲ್ಲೆಯ ಪ್ರಾದೇಶಿಕ ದಿನ ಪತ್ರಿಕೆಗಳಲ್ಲಿ ಪ್ರಕಟಿಸಲಾಗಿದೆ.
ಮಾಹಿತಿಯನ್ನು ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ವಿಮಾ ಅರ್ಜಿ ತಿರಸ್ಕೃತಗೊಂಡ ಬಗ್ಗೆ ಆಕ್ಷೇಪಣೆಗಳನ್ನು ಪಡೆಯಬಹುದಾಗಿರುತ್ತದೆ. ಸಂಬಂಧಪಟ್ಟ ರೈತರು ಆಕ್ಷೇಪಣೆ ಇದ್ದಲ್ಲಿ ಮಾತ್ರ ಮನವಿಯನ್ನು ಸಲ್ಲಿಸಲು ಹಾಗೂ ಮರುಪರಿಶೀಲಿಸಲು, ಸದರಿ ಮನವಿಯೊಂದಿಗೆ ಬೆಳೆ ವಿಮೆಗೆ ನೋಂದಣಿಯಾಗಿರುವ ಬೆಳೆಯನ್ನು ಬೆಳೆದಿರುವ ಕುರಿತು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಅಂತಹ ಮನವಿಗಳನ್ನು ತಾಲ್ಲೂಕು ಮಟ್ಟದ ಸಮಿತಿಯಲ್ಲಿ ಮಂಡಿಸಿ ಕೂಲಂಕುಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದು. ತಾಲ್ಲೂಕು ಮಟ್ಟದ ಸಮಿತಿಯ ನಿರ್ಣಯವನ್ನು ರೈತ ಒಪ್ಪದಿದ್ದಲ್ಲಿ, ಜಿಲ್ಲಾ ಮಟ್ಟದ ಸಮಿತಿಗೆ ಮೇಲ್ಮನವಿ ಸಲ್ಲಿಸಬಹುದು. ಜಿಲ್ಲಾ ಮಟ್ಟದ ಸಮಿತಿಯ ನಿರ್ಧಾರವು ಅಂತಿಮವಾಗಿರುತ್ತದೆ. ಆಯಾ ತಾಲ್ಲೂಕಿನಲ್ಲಿ ಯಾವುದೇ ಆಕ್ಷೇಪಣೆಗಳು 15 ದಿನಗಳೊಳಗಾಗಿ ರೈತರಿಂದ ಬಂದಿಲ್ಲದಿದ್ದರೆ, ತಾಲ್ಲೂಕಿನ ಎಲ್ಲಾ ಪ್ರಸ್ತಾವನೆಗಳನ್ನು reject ಮಾಡುವುದು.
ತದನಂತರ, ತಾಲ್ಲೂಕು/ ಜಿಲ್ಲಾ ಸಮಿತಿಯ ನಡವಳಿಯನ್ವಯ ಸಂರಕ್ಷಣೆ ತಂತ್ರಾಂಶದಲ್ಲಿ PMFBY(loanee and Non Loanee proposals) ಅಧಿಕಾರಿಗಳ login ನಲ್ಲಿ ಹಾಗೂ PMFBY ತೋಟಗಾರಿಕೆ ಬೆಳೆಗಳನ್ನು (loanee and Non Loanee proposals) ತಾಲ್ಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳ login ನಲ್ಲಿ ಸಿಂಧುವಾದ ಪ್ರಸ್ತಾವನೆಗಳನ್ನು (accepted proposals) accept ಮಾಡುವುದು, ಉಳಿದ ಪ್ರಸ್ತಾವನೆಗಳನ್ನು reject ಮಾಡುವುದು. ಸಂರಕ್ಷಣೆ ತಂತ್ರಾಂಶದಲ್ಲಿ ಪ್ರಸ್ತಾವನೆಗಳನ್ನು accept ಅಥವ reject ಮಾಡುವಲ್ಲಿ ಜಾಗೃತತೆಯನ್ನು ವಹಿಸಲು ಸೂಚಿಸಿದೆ.
ವಿಶೇಷ ಸೂಚನೆ: ಎಲ್ಲಾ ಹಂತದ ಸಭೆಗಳಲ್ಲಿ ವಿಮಾ ಸಂಸ್ಥೆ ಹಾಗೂ ತೋಟಗಾರಿಕೆ ಇಲಾಖೆ
ಅಧಿಕಾರಿಯವರ ಉಪಸ್ಥಿತಿ ಹಾಗೂ ಕೈಗೊಳ್ಳುವ ನಿರ್ಧಾರಗಳಲ್ಲಿ ವಿಮಾ ಸಂಸ್ಥೆಯವರ ಸಹಮತಿ * ಅವಶ್ಯವಿರುತ್ತದೆ. ತಿರಸ್ಕೃತಗೊಂಡ ಪ್ರಸ್ತಾವನೆಗಳ ಕುರಿತು ಪ್ರಚಾರ ಪಡಿಸಿರುವ ಬಗ್ಗೆ, ಸಭೆಯ ನಡವಳಿಯ ಪ್ರತಿಯನ್ನು ಹಾಗೂ ಸಿಂಧುವಾದ ಪ್ರಸ್ತಾವನೆಗಳ (accepted proposals) ಅಗತ್ಯ ದಾಖಲೆಗಳನ್ನು ವಿಮಾ ಸಂಸ್ಥೆಯವರಿಗೆ ಒದಗಿಸತಕ್ಕದು. ಕೇಂದ್ರ ಕಛೇರಿಗೆ ತಿರಸ್ಕೃತಗೊಂಡ ಪ್ರಸ್ತಾವನೆಗಳ ಕುರಿತು ಪ್ರಚಾರ ಪಡಿಸಿರುವ ಬಗ್ಗೆ ಮತ್ತು ಸಭೆಯ ನಡವಳಿಯ ಪ್ರತಿಯನ್ನು ಸಲ್ಲಿಸಿದ ನಂತರ ಸಭೆಯ ನಡವಳಿಯಂತೆ ಪ್ರಸ್ತಾವನೆಗಳನ್ನು ಇತ್ಯರ್ಥಪಡಿಸಲು ವಿಮಾ ಸಂಸ್ಥೆಯವರಿಗೆ ಸೂಚಿಸಲಾಗುವುದು.
ತಾಲ್ಲೂಕು/ಜಿಲ್ಲಾ ಮಟ್ಟದ ಸಮಿತಿಯ ಸಭೆಗಳಲ್ಲಿ ಆಕ್ಷೇಪಿಸಿದ ಪ್ರಸ್ತಾವನೆಗಳನ್ನು ಪರಿಶೀಲಿಸಲು ಗಮನಿಸಬೇಕಾದ ಅಂಶಗಳು ಈ ಕೆಳಕಂಡಂತಿದೆ,
1) 2023-24ರ ಪಹಣಿ ಪತ್ರಿಕೆಯಲ್ಲಿ (RTC) ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರಬೇಕು.
2) ಬೆಂಬಲ ಬೆಲೆ ಪ್ರಯೋಜನ ಪಡೆದಿದಲ್ಲಿ, ರಶೀದಿ ಪಡೆದು ಪರಿಶೀಲಿಸುವುದು.
3) ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನು APMC ಮಾರುಕಟ್ಟೆಗೆ ಮಾರಾಟ ಮಾಡಿದ್ದಲ್ಲಿ ಸದರಿ ದಾಖಲೆ ಪಡೆದು ಪರಿಶೀಲಿಸುವುದು.
ತಿರಸ್ಕೃತ ಗೊಂಡಿರುವ ಬೆಳೆ ವಿಮೆ ಪ್ರಸ್ತಾವನೆಗಳ ರೈತರ ಪಟ್ಟಿಯನ್ನು ಗ್ರಾಮ ಪಂಚಾಯತ್, ರೈತ ಸಂಪರ್ಕ ಕೇಂದ್ರ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪ್ರದರ್ಶಿಸಲಾಗಿದೆ. ಸಂಬಂಧಪಟ್ಟ ರೈತರು ಆಕ್ಷೇಪಣೆ ಇದ್ದಲ್ಲಿ ಫೆಬ್ರವರಿ 27 ನೇ ದಿನಾಂಕ ಒಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಟ್ಟು ಆಕ್ಷೇಪಣೆ ಸಲ್ಲಿಸಿ.
ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "kharif" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-Proposal number ಎಂದರೆ ಬೆಳೆವಿಮೆ ಕಟ್ಟಿದ ರಶೀದಿಯಲ್ಲಿ 6 ಸಂಖ್ಯೆಯ acknowledgment number.ಒಂದು ವೇಳೆ ಬೆಳೆ ವಿಮೆ ಕಟ್ಟಿದ ರಶೀದಿ ಕಳೆದು ಹೊಗಿದ್ದರೆ ನಿಮ್ಮ ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಿ)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ನಂತರ Select ಮೇಲೆ ಕ್ಲಿಕ್ ಮಾಡಿದರೆ,ಈ ಕೆಳಗಿನಂತೆ ಬೆಳೆವಿಮೆ ಕಂಪನಿಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಿರುವುದನ್ನು ತೋರಿಸುತ್ತದೆ.ಒಂದು ವೇಳೆ ಅರ್ಜಿ ತಿರಸ್ಕೃತಗೊಂಡಿದ್ದರೆ Application rejected ಎಂದು ತೋರಿಸುತ್ತದೆ.ಹಾಗೇನಾದರು ಅರ್ಜಿ ತಿರಸ್ಕೃತಗೊಂಡಿದ್ದರೆ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಟ್ಟು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅದೇ ರೀತಿ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಬೆಳೆ ವಿಮೆ ತಿರಸ್ಕೃತ ಪಟ್ಟಿಯನ್ನು(Bele vime rejected list) ಲಗತ್ತಿಸಲಾಗಿದ್ದು,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಆಕ್ಷೇಪಣೆ ಸಲ್ಲಿಸಿ.
ಪ್ರಸಕ್ತ ಸಾಲಿನ ಬೆಳೆ ವಿಮೆ ಸ್ಥಳೀಯ ವಿಕೋಪದಡಿ ಜಿಲ್ಲೆಯ ಒಟ್ಟು 2,03,720 ರೈತರಿಗೆ ₹76.94 ಕೋಟಿ ಪರಿಹಾರ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.
ರೈತರು ಬ್ಯಾಂಕ್ಗಳಿಗೆ ಭೇಟಿ ನೀಡಿ ತಮ್ಮ ಖಾತೆಗೆ ಪರಿಹಾರ ಹಣ ಜಮೆಯಾಗಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.
ರೈತರು ಬ್ಯಾಂಕ್ಗಳಿಗೆ ಭೇಟಿ ನೀಡಿ ತಮ್ಮ ಖಾತೆಗೆ ಪರಿಹಾರ ಹಣ ಜಮೆಯಾಗಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
Crop insurance:2024-25ನೇ ಸಾಲಿನ ಬೆಳೆ ವಿಮೆ ಹಣ ಜಮಾ ಪ್ರಾರಂಭ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ತುಂಬಿನ ಬೆಳೆಹಾನಿ ಆಗಿರುವ ಹಾಗೂ ಅರ್ಜಿ ಸಲ್ಲಿಸಿರುವ ರೈತರಿಗೆ ಸ್ಥಳಿಯ ಗಂಡಾಂತರದಡಿ(localised calamity) ಇನ್ಸುರೆನ್ಸ್ ಕಂಪನಿಯರು ವಿಮಾದಾರರ ಖಾತೆಗೆ ಬೆಳೆ ವಿಮೆ ಹಣ ಬಿಡುಗಡೆ ಮಾಡಿದ್ದಾರೆ.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಫೆಬ್ರುವರಿ 24ರಂದು ಬಿಡುಗಡೆ ಆಗಲಿದೆ . ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ-Pmkisan beneficiary status
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಮೊದಲು know your status ಮೇಲೆ ಕ್ಲಿಕ್ ಮಾಡಿ
ನಂತರ know your register number ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ
ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.
ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ
ನಂತರ update your details ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ
Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.
ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ
Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.
FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ ಕಾರಣ ಮತ್ತು ಪರಿಹಾರ
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
fruitspmk.gov.in ಪೋರ್ಟಲ್ ನಲ್ಲಿ |
|||
1 |
ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ |
ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು |
ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ (NIC) ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ. ಆ) ಸಮಸ್ಯಾತ್ಮಕ ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ. |
2 |
ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು |
ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ |
ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ |
3 |
ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು |
ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ |
ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ |
4 |
ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ |
ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ |
OPERATOR ಲಾಗಿನ್ (RSK, ADA office, JDA office) OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು |
5 |
01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ |
ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ |
ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ) |
6 |
Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು |
ಜಿಲ್ಲೆಗಳಲ್ಲಿ OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ |
AAO ಲಾಗಿನ್ (RSK, ADA office, JDA office) AAO ಲಾಗಿನ್ನಲ್ಲಿ ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ, ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
7 |
ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ |
ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ) |
AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ. |
8 |
PFMS rejected |
Aadhaar Number is not seeded in NPCI |
ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ |
Bank Name And IFSC Code are not related to each other |
ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ |
||
Bank Name is not as per PFMS Bank Master. |
|||
Beneficiary is rejected as Account Type is other than SB / SBA / JD |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ) |
||
Duplicate Beneficiary Name , Bank Account No and Bank Name not allowed for same scheme |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
IFSC Code either not present or currently inactive in tbl BankBranch |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
Incorrect Aadhaar Number |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
One or more mandatory tags values are missing. |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
||
Rejected by Bank, Account No does not exist in Bank/INVALID/CLOSED |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
9 |
Amount credited to Account Number-NA |
Aadhaar number based payment by GoI |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ. |
10 |
PAYMENT STOPPED BY STATE |
XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ |
ಕೇಂದ್ರ ಸರ್ಕಾರ |
11 |
Transaction failed |
ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ. |
12 |
ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ |
OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ |
ಕೇಂದ್ರ ಸರ್ಕಾರ |
13 |
ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು |
ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ. |
ಕೇಂದ್ರ ಸರ್ಕಾರ ದ pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ. |
ಬೆಳೆ ಸಮೀಕ್ಷೆ(Bele samikshe) ಮೂಲಕ ಸಂಗ್ರಹಿಸಲಾದ ಬೆಳೆ
ಮಾಹಿತಿ ಕುರಿತು ಆಕ್ಷೇಪಣೆ ಸಲ್ಲಿಸಲು ಫೆಬ್ರುವರಿ 15ರವರೆಗೆ ರವರೆಗೆ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ ದರ್ಶಕ ಮೊಬೈಲ್ ಆ್ಯಪ್(Bele darshaka App)ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ(Crop survey portal) ಮೂಲಕ ಆಕ್ಷೇಪಣೆ ಸಲ್ಲಿಸಬಹುದು.
ಬೆಳೆ ಸಮೀಕ್ಷೆ ದತ್ತಾಂಶವನ್ನು ಬೆಳೆವಿಮೆ(Bele vime), ಬೆಂಬಲ ಬೆಲೆ ಯೋಜನೆಯಡಿ(MSP) ಬೆಳೆ ಮಾರಾಟ ಮಾಡಲು, ಬೆಳೆ ನಷ್ಟ ಪರಿಹಾರ(bele hani) ಹಾಗೂ ಇತರ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಳಕೆ ಮಾಡಲಾಗುವುದು. ಆದ್ದರಿಂದ ರೈತರು ತಾವು ಬೆಳೆದ ಬೆಳೆ ಹಾಗೂ ಬೆಳೆ ಸಮೀಕ್ಷೆಯಲ್ಲಿ (crop survey)ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಖಾತ್ರಿಪಡಿಸಿಕೊಳ್ಳಬೇಕು. ಒಂದು ವೇಳೆ ಭಿನ್ನವಾಗಿದ್ದಲ್ಲಿ, ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ನಂತರದ ಆಕ್ಷೇಪಣೆ ಸ್ವೀಕರಿಸಲಾಗುವುದಿಲ್ಲ.
ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಗೂಗಲ್ ಪ್ಲೇ ಸ್ಟೋರ್ ಮೂಲಕ ಅಥವಾ https://play.google.com/
ನಂತರ ರೈತ select ಮಾಡಿ
ನಂತರ ವರ್ಷ,ಋುತು, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ.
ನಂತರ ಸರ್ವೇ ನಂಬರ್ ಹಾಕಿ,ಹಿಸ್ಸಾಆಯ್ಕೆ ಮಾಡಿ,ಸಮೀಕ್ಷೆಯ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ನಂತರ ಬೆಳೆವಿವರ ವೀಕ್ಷಿಸಿ ಮೇಲೆ ಕ್ಲಿಕ್ ಮಾಡಿ
ನಂತರ photo ಮೇಲೆ ಕ್ಲಿಕ್ ಮಾಡಿದರೆ ನೀವು ಬೆಳೆದ ಬೆಳೆ ಹಾಗೂ ಫೋಟೊ ಅಪ್ಲೊಡ್ ಸರಿಯಾಗಿರುವುದನ್ನು ಪರಿಕ್ಷೀಸಿ.
ಬೆಳೆ ಸಮಿಕ್ಷೆ ಸರಿಯಾಗಿರದಿದ್ದರೆ,ಫೆಬ್ರುವರಿ 15ರೊಳಗೆ ಆಕ್ಷೇಪಣೆ ಸಲ್ಲಿಸಿದರೆ, ಪುನಃ ಬೆಳೆ ಸಮಿಕ್ಷೆ ಮಾಡಿ ಸರಿಪಡಿಸಲು ಅವಕಾಶವಿರುತ್ತದೆ.
ಏನಿದು ಬೆಳೆ ದರ್ಶಕ ಆ್ಯಪ್?
ಈ ಅಪ್ಲಿಕೇಶನ್ ಮಾಡಿದ ಉದ್ದೇಶ ಬೆಳೆ ಸಮೀಕ್ಷೆಯನ್ನು (Crop survey)ನೋಡಲು.. ಇದರಲ್ಲಿ ನೀವು ಅಪ್ಲೋಡ್ ಮಾಡಿದ ಚಿತ್ರಗಳನ್ನು ಮತ್ತು ಸಮೀಕ್ಷೆ ಮಾಡಿದ ಸರ್ವೇಯರ್ ವಿವರಗಳನ್ನು ನೋಡಬಹುದು.
ತಮ್ಮ ಮೊಬೈಲ್ ಮೂಲಕ ಬೆಳೆಗಳ ಸಮೀಕ್ಷೆ(Bele samikshe) ಮಾಡಬಹುದು. ಅಥವಾ ನೆರೆಯ ಖಾಸಗಿ ವ್ಯಕ್ತಿಗಳ (Private resident) ಮೊಬೈಲ್ ಮೂಲಕ ಜಮೀನುಗಳ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ನಿಮ್ಮ ಜಮೀನಿನ ಸರ್ವೆ ನಂಬರ್(Survey number) ಮತ್ತು ಜಮೀನಿನ ಫೊಟೋ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಮೊಬೈಲ್ ನಲ್ಲಿ Bele darshak app ಮೂಲಕ ಕ್ಷಣಾರ್ಧದಲ್ಲಿ ನೋಡಬಹುದು. ಒಂದು ವೇಳೆ ತಪ್ಪಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು.
ಬೆಳೆ ದರ್ಶಕ್ ಆ್ಯಪ್(bele darshaka app) ಇನ್ಸ್ ಸ್ಟಾಲ್ ಮಾಡಿಕೊಂಡ ನಂತರ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಇನ್ನಿತರ ಮಾಹಿತಿ ನಮೂದಿಸಬೇಕು. ಬೆಳೆ ದರ್ಶಕ್ ಆ್ಯಪ್(Bele darshaka application) ಮೂಲಕ ಜಮೀನಿನಲ್ಲಿ ಬೆಳೆ ಸಮೀಕ್ಷೆ (Bele samikshe)ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ (Crop survey)ಸಮಯದಲ್ಲಿ ತೆಗೆಯಲಾದ ಜಿಪಿಎಸ್ ಆಧಾರಿತ (GPS Photo)ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ಅಲ್ಲದೆ ರೈತರ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ, (Mobile number)ರೈತರು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ನೋಡಬಹುದು.
ಒಂದು ವೇಳೆ ಮಾಹಿತಿ ತಪ್ಪಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು.ಮೇಲ್ವಿಚಾರಕರು ಸೂಕ್ತ ಬೆಳೆಗಳನ್ನು ದಾಖಲಿಸಿ ರೈತರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುತ್ತಾರೆ. ಇನ್ನೇಕೆ ತಡ ಒಮ್ಮೆ ನಿಮ್ಮ ಬೆಳೆ ಸಮೀಕ್ಷೆಯಲ್ಲಿ ಎಲ್ಲಾ ಸರ್ವೆ ನಂಬರ್, ಮಾಹಿತಿ ಹಾಗೂ ಫೋಟೋ ಸರಿಯಾಗಿ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಡಿ
]]>ಕೃಷಿ ಅಧಿಕಾರಿಗಳು | 86 RPC + 42HK :128 ಒಟ್ಟು |
ಸಹಾಯಕ ಕೃಷಿ ಅಧಿಕಾರಿಗಳು | 586 RPC + 231 HK : 817 ಒಟ್ಟು |
ಕೃಷಿ ಇಲಾಖೆಯಲ್ಲಿ ಭರ್ತಿ ಮಾಡುವ ಒಟ್ಟು ಹುದ್ದೆಗಳ ಸಂಖ್ಯೆ | 945 |
ಅಧಿಸೂಚನೆ ಬಿಡುಗಡೆ ಆದ ದಿನಾಂಕ | 20-09-2024 |
ಆನ್ಲೈನ್ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ | 03-01-2025 |
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ | 15-02-2025 |
ಕೃಷಿ ಅಧಿಕಾರಿ / ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ ವಿವರ
ಕೃಷಿ ಇಲಾಖೆ ಹುದ್ದೆಗಳಿಗೆ ವರ್ಗಾವಾರು ನಿಗದಿತ ಕನಿಷ್ಠ, ಗರಿಷ್ಠ ವಯಸ್ಸಿನ ಅರ್ಹತೆಗಳು
ಕೃಷಿ ಇಲಾಖೆ ಹುದ್ದೆಗಳಿಗೆ ಅರ್ಜಿ ಶುಲ್ಕ ವಿವರ
ನೋಟಿಫಿಕೇಶನ್ ಹಾಗೂ ಇತರೆ ಹೆಚ್ಚಿನ ಮಾಹಿತಿಗಳಿಗಾಗಿ https://www.kpsc.kar.nic.in/notification.html ವೆಬ್ಸೈಟ್ಗೆ ಭೇಟಿ ನೀಡಿರಿ.
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲಾಗಿದೆ.
ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.
ಏನಿದು ಫ್ರೂಟ್ಸ್ ನಂಬರ್
ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.
ನಿಮ್ಮ FID ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.
ಏಕೆ ನೋಂದಾಯಿಸಬೇಕು?
ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್ ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ
ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.
ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.
ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು
]]>
ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ದೆಹಲಿ ಚುನಾವಣೆಗೂ ಮೊದಲು ಜನೇವರಿ ಕೊನೆಯ ವಾರ ಅಥವಾ ಫೆಬ್ರುವರಿ ಮೊದಲ ವಾರ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ರೂ. 2000/- ಮೊತ್ತದ ತರಕಾರಿ ಬೀಜಗಳ ಕಿಟ್ನ್ನು ವಿತರಣೆ ಮಾಡಲಾಗುತ್ತಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಆಧಾರ್ಕಾರ್ಡ್ ಜೇರಾಕ್ಸ್, ಬ್ಯಾಂಕ್ ಪಾಸ್ ಬುಕ್ ಜೇರಾಕ್ಸ್, ಜಾತಿ ಪ್ರಮಾಣ ಪತ್ರ(ಪ.ಜಾ/ಪ.ಪಂ.ದವರಿಗೆ ಮಾತ್ರ) ಗಳನ್ನು ಸಲ್ಲಿಸಿ ಫೆ. 11 ರಿಂದ ತರಕಾರಿ ಬೀಜಗಳ ಕಿಟ್ನ್ನು ಪಡೆಯುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Horticulture-department-schemes
ತೋಟಗಾರಿಕೆ ಇಲಾಖೆಯಿಂದ(Horticulture department schemes) ಸಣ್ಣ ಟ್ರ್ಯಾಕ್ಟರ್(Mini tractor)
• ಡ್ರಾಗನ್ ಪೂಟ್(Dragon fruit), ಈರುಳ್ಳಿ ಶೇಖರಣಾ ಘಟಕಕ್ಕೆ (Onion storage)ಸಹಾಯಧನ
• ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ(green house) ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ ನೀರುಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಲ್ಲಿ ಅರ್ಜಿ ಸಲ್ಲಿಸಬೇಕು
ಆಸಕ್ತ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ (Horticulture department)ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ಅರ್ಜಿದಾರರ ಅಧಾರ್ ಕಾರ್ಡ್ ಪ್ರತಿ.
• ಬ್ಯಾಂಕ್ ಪಾಸ್ ಬುಕ್ ಪ್ರತಿ.
• ಪೋಟೋ.
• ಪಹಣಿ/ಉತಾರ್/RTC.
ರೇಷನ್ ಕಾರ್ಡ ಪ್ರತಿ.
ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.
ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM);
ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(Pradna mantri krishi sinchayi yojane);
ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ(drip irrigation) ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್ರವರೆಗೆ ಶೇಕಡಾ 90%) ಸಹಾಯಧನ.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ (NAREGA)ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ(PMKVY) ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ(NHM) ಸಮುದಾಯ ಕೃಷಿಹೊಂಡ(Farm pond), ಕೃಷಿಹೊಂಡ, ಪ್ಯಾಕ್ಹೌಸ್(Pack house), ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) (Fiber doti)ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್ (Aadhaar card) ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ
https://horticulturedir.karnataka.gov.in/info-2/Facilities+available+to+farmers/kn
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಕಚೇರಿಯನ್ನು
ಸಂಪರ್ಕಿಸುವುದು.
"PM Surya Ghar Yojana" ಈ ಯೋಜನೆಯಡಿ ಸರ್ಕಾರ ಜನರಿಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲು ಯೋಜನೆ ರೂಪಿಸುತ್ತಿದೆ, ಇದಕ್ಕಾಗಿ ನಿಜವಾದ ಸಬ್ಸಿಡಿಯನ್ನು ನೀಡಲಾಗುವುದು ಅದನ್ನು ನೇರವಾಗಿ ಜನರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು ಎನ್ನಲಾಗಿದೆ.
2024ರ ಫೆಬ್ರುವರಿಯಲ್ಲಿ ಆರಂಭವಾದ ಪಿಎಂ ಸೂರ್ಯಘರ್ ಮುಫ್ತ್ ಬಿಜಿಲಿ ಉಚಿತ ವಿದ್ಯುತ್ ಯೋಜನೆ ಅಡಿಯಲ್ಲಿ ಜನರ ಮನೆಗಳ ಮೇಲ್ಛಾವಣಿಯಲ್ಲಿ ಸೋಲಾರ್ ಘಟಕಗಳನ್ನು ಸ್ಥಾಪಿಸುವ ಮೂಲಕ ವಿದ್ಯುತ್ ಸ್ವಾಲಂಬನೆ ಸಾಧಿಸುವ ಗುರಿ ಹೊಂದಲಾಗಿದ್ದು, ಅದಕ್ಕಾಗಿ ಸಬ್ಸಿಡಿ ಮೊತ್ತದ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಪ್ರಧಾನಮಂತ್ರಿ ಸೂರ್ಯ ಘರ್ ಮುಕ್ತ ವಿದ್ಯುತ್ ಯೋಜನೆಯಡಿಯಲ್ಲಿನ ಸಬ್ಸಿಡಿ ಮಾಹಿತಿಯನ್ನು ಬೆಸ್ಕಾಂ (BESCOM) ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. 5 ವರ್ಷ ಪಾವತಿಯನ್ನು ಮಾಡಿ, 20 ವರ್ಷ ಯಾವುದೇ ಹಣ ಪಾವತಿಸದೇ, ವಿದ್ಯುತ್ ಅನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದೆ.
ರೂಫ್ ಟಾಪ್ ಸೋಲಾರ್ ಪ್ಲ್ಯಾಂಟ್ ಹಾಕಿಸಿಕೊಳ್ಳಲು ತಗಲುವ ಖರ್ಚು ಮತ್ತು ಅದರಿಂದಾಗುವ ಉಳಿತಾಯದ ಬಗ್ಗೆಯೂ ಬೆಸ್ಕಾಂ ವಿವರಣೆಯನ್ನು ನೀಡಿದೆ. ಇದಕ್ಕೆ ವಾರ್ಷಿಕ 7% ನಲ್ಲಿ ಬ್ಯಾಂಕ್ ಲೋನ್ ಕೂಡಾ ಲಭ್ಯವಿದೆ. ಹತ್ತು ವರ್ಷದವರೆಗೆ ಇಎಂಐ ಕಟ್ಟುವ ಅವಕಾಶವೂ ಇದೆ ಎಂದು ಬೆಸ್ಕಾಂ ತನ್ನ ಎಕ್ಸ್ ಅಕೌಂಟ್ ನಲ್ಲಿ ಮಾಹಿತಿ ನೀಡಿದೆ.
ಒಂದು ಕಿಲೋವ್ಯಾಟ್ ಸೋಲಾರ್ ಫಲಕ ಹಾಕಲು 10 X 10 ಜಾಗ ಸಾಕು ಮತ್ತು ಪ್ಲ್ಯಾಂಟಿನ ಮೊತ್ತ ಐದು ವರ್ಷದ ನಿರ್ವಹಣಾ ವೆಚ್ಚವೂ ಒಳಗೊಂಡಂತೆ ಸೇರಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಹೇಳಿದೆ. ಲೇಟೆಸ್ಟ್ ವಿದ್ಯುತ್ ಬಿಲ್ ಮತ್ತು ಆಧಾರ್ ಕಾರ್ಡಿನ ಕಾಪಿಯೊಂದಿಗೆ ಇದಕ್ಕೆ ಅರ್ಜಿ ಸಲ್ಲಿಸಬಹುದು.
ಮನೆಬಳಕೆಯ ನಂತರ ಉಳಿಯುವ ವಿದ್ಯುತ್ ಅನ್ನು ಮಾರಾಟ ಮಾಡುವ ಮೂಲಕ, ತಿಂಗಳು ತಿಂಗಳು ಹಣವನ್ನೂ ಸಹ ಸಂಪಾದಿಸಬಹುದು ಎಂದು ಬೆಸ್ಕಾಂ ಹೇಳಿದೆ. 1, 2 ಮತ್ತು 3 ಕಿಲೋವ್ಯಾಟ್ ಸಾಮರ್ಥ್ಯದ ಸೋಲಾರ್ ಪ್ಲ್ಯಾಂಟ್ ಅಳವಡಿಸಬಹುದಾಗಿದೆ.
ಇದಕ್ಕೆ ಯಾರೂ ಬೇಕಾದರೂ ಅರ್ಜಿ ಸಲ್ಲಿಕೆ ಮಾಡಬಹುದು. ಸಬ್ಸಿಡಿ ಪಡೆಯಲು ಗರಿಷ್ಠ ಪೇಲೋಡ್ ಶೇಕಡಾ 85 ರಷ್ಟು ಮೀರಿರಬಾರದು ಅಷ್ಟೇ. ಅರ್ಜಿ ಸಲ್ಲಿಸಲು ಕೇಂದ್ರ ಸರ್ಕಾರದ ಅಧಿಕೃತ ಪಿಎಂ ಘರ್ ಮುಕ್ತ್ ಬಿಜಿಲಿ ಯೋಜನೆ ಅಧಿಕೃತ ವೆಬ್ಸೈಟ್(https://www.pmsuryaghar.gov.in/) ಮೂಲಕ ಸುಲಭವಾಗಿ ಸಲ್ಲಿಕೆ ಮಾಡಬಹುದು.
ಯೋಜನೆ ಲಾಭ ಪಡೆಯಲು ಬಯಸಿದವರು ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ ಕೆಲ ಅಗತ್ಯ ಮಾಹಿತಿ ಹಾಗೂ ದಾಖಲೆ ಸಲ್ಲಿಸಬೇಕು. ಪ್ರಮುಖವಾಗಿ ವಿದ್ಯುತ್ ಗ್ರಾಹಕರ ಸಂಖ್ಯೆ, ಮೊಬೈಲ್ ಸಂಖ್ಯೆ, ಇಮೇಲ್, ವಿದ್ಯುತ್ ವಿತರಣಾ ಕಂಪನಿ ಸೇರಿದಂತೆ ಅಗತ್ಯ ಮಾಹಿತಿ ದಾಖಲಿಸಿ ರೂಫ್ ಟಾಪ್ ಸೋಲಾರ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕು.
DISCOMನಲ್ಲಿ ಅದಿಕೃತಗೊಳಿಸಿರುವ ಡೀಲರ್ನಿಂದ ಸೋಲಾರ್ ಪ್ಯಾನಲ್ ಖರೀದಿಸಿ ಅಳವಡಿಸಿಕೊಳ್ಳಬೇಕು. ಅಳವಡಿಕೆ ಬಳಿಕ ನಿಮ್ಮ ಸೋಲಾರ್ ಘಟಕದ ವಿವರಗಳೊಂದಿಗೆ ನೆಟ್ ಮೀಟರ್ಗೆ ಮನವಿ ಸಲ್ಲಿಸಬೇಕು. ಈ ಎಲ್ಲಾ ಪರಿಶೀಲನೆ ಬಳಿಕ ಕಮಿಷನಿಂಗ್ ವರದಿ ಬರಲಿದೆ. ಈ ವರದಿ ಬಳಿಕ ಬ್ಯಾಂಕ್ ಖಾತೆ ವಿವರ, ರದ್ದು ಮಾಡಿರುವ ಚೆಕ್ ಸೇರಿದಂತೆ ಇತರ ಮಾಹಿತಿಗಳನ್ನು ನೀಡಬೇಕು. ಈ ವೇಳೆ ನೀವು ನೀಡಿದ ಬ್ಯಾಂಕ್ ಖಾತೆಗೆ ಯೋಜನೆಯ ಸಬ್ಸಿಡಿ ಮೊತ್ತವನ್ನು ಕೇಂದ್ರ ಸರ್ಕಾರ ಜಮೆ ಮಾಡಲಿದೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಮೊದಲ ಐದು ವರ್ಷದಲ್ಲೇ ಹಾಕಿದ ಬಂಡವಾಳ ವಾಪಸ್ ಬರುತ್ತದೆ. ಬಳಕೆಯ ನಂತರ ಉಳಿದ ವಿದ್ಯುತ್ ಅನ್ನು ಆಯಾಯ ವಿದ್ಯುತ್ ಪೂರೈಕೆ ಕಂಪೆನಿಗಳಿಗೆ ಮಾರಾಟ ಮಾಡುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಸೂರ್ಯಘರ್ ಯೋಜನೆಗೆ ಈ ಲಿಂಕ್ ಮೂಲಕ https://pmsuryaghar.gov.in ನೋಂದಾಯಿಸಿಕೊಳ್ಳಬಹುದು ಹಾಗೂ ಬೆಸ್ಕಾಂನ ಸೋಲಾರ್ ಸಹಾಯವಾಣಿ ಸಂಖ್ಯೆ
ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸುವ ಕ್ರಮ
ಪಿಎಂ ಸೂರ್ಯ ಘರ್ ಯೋಜನೆಗೆಂದು ಪೋರ್ಟಲ್ ಸಿದ್ಧಪಡಿಸಲಾಗಿದೆ. ಅಲ್ಲಿ ನೊಂದಾಯಿಸಿಕೊಳ್ಳಬೇಕು. ಅದರ ಲಿಂಕ್ ಇಲ್ಲಿದೆ: www.pmsuryaghar.gov.in
ನಂತರ Apply for rooftop solar ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಡಿಸ್ಕಾಂ ಕಂಪನಿ ಆಯ್ಕೆ ಮಾಡಿ
ನಂತರ ವಿದ್ಯುತ್ ಬಿಲ್ನ ಕನ್ಸೂಮರ್ ನಂಬರ್, ಮೊಬೈಲ್ ನಂಬರ್ ಮತ್ತು ಇಮೇಲ್ ನಮೂದಿಸಿ,Captcha code ಹಾಕಿ Submit ಮೇಲೆ ಕ್ಲಿಕ್ ಮಾಡಿ
Register ಆದ ನಂತರ ಕನ್ಸೂಮರ್ ನಂಬರ್ ಮತ್ತು ಮೊಬೈಲ್ ನಂಬರ್ ಬಳಸಿ ಲಾಗಿನ್ ಆಗಿರಿ.
ಲಾಗಿನ್ ಆದ ಬಳಿಕ ರೂಫ್ಟಾಪ್ ಸೋಲಾರ್ ಅಪ್ಲಿಕೇಶನ್ ಫಾರ್ಮ್ ಅನ್ನು ಭರ್ತಿ ಮಾಡಿ ಸಲ್ಲಿಸಬೇಕು.
ಇದಕ್ಕೆ ಅನುಮೋದನೆ ಸಿಗುವವರೆಗೂ ಕಾಯಬೇಕು. ಅನುಮೋದನೆ ದೊರೆತ ಬಳಿಕ ನೊಂದಾಯಿತ ಮಾರಾಟಗಾರರು ನಿಮ್ಮ ಮನೆಗೆ ಬಂದು ಸೌರ ಘಟಕವನ್ನು ಸ್ಥಾಪಿಸುತ್ತಾರೆ.
ಇದಾದ ಬಳಿಕ ನೆಟ್ ಮೀಟರ್ಗೆ ಅರ್ಜಿ ಸಲ್ಲಿಸಬೇಕು.
ನೆಟ್ ಮೀಟರ್ ಇನ್ಸ್ಟಾಲ್ ಆಗಿ ಡಿಸ್ಕಾಂ ಅಧಿಕಾರಿಗಳಿಂದ ಪರಿಶೀಲನೆ ಆದ ಬಳಿಕ ಕಮಿಷನಿಂಗ್ ಸರ್ಟಿಫಿಕೇಟ್ ಸಿಗುತ್ತದೆ.
ಬಳಿಕ ಪಿಎಂ ಸೂರ್ಯಘರ್ ಪೋರ್ಟಲ್ಗೆ ಹೋಗಿ ಮತ್ತೆ ಲಾಗಿನ್ ಆಗಿ, ನಿಮ್ಮ ಬ್ಯಾಂಕ್ ಖಾತೆ ವಿವರ ನೀಡಿ. ಕ್ಯಾನ್ಸಲ್ ಮಾಡಿದ ಚೆಕ್ನ ಸ್ಕ್ಯಾನ್ಡ್ ಕಾಪಿಯನ್ನು ಅಪ್ಲೋಡ್ ಮಾಡಿ. ಇದು ಕೊನೆಯ ಪ್ರಕ್ರಿಯೆ. ಇದು ಮುಗಿದ ಬಳಿಕ 30 ದಿನದೊಳಗೆ ನಿಮ್ಮ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಸಬ್ಸಿಡಿ ಹಣ ಬಂದು ಸೇರುತ್ತದೆ.
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
2023ರ ಮುಂಗಾರು ಹಂಗಾಮಿನಲ್ಲಿ ತೊಗರಿ ನೆಟೆರೋಗದಿಂದ ನಷ್ಟಗೊಂಡ ರಾಜ್ಯದ ರೈತರಿಗೆ ಸರ್ಕಾರವು ₹233 ಕೋಟಿ ಪರಿಹಾರ ವಿತರಿಸಿದೆ. ಕಲಬುರಗಿ, ಯಾದಗಿರಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ರೈತರಿಗೆ ಈ ಸಹಾಯ ಲಭ್ಯವಾಗಿದ್ದು, ಕೃಷಿ ಚಟುವಟಿಕೆ ಪುನಶ್ಚೇತನಗೊಳ್ಳಲು ಇದು ಮಹತ್ವದ ಹೆಜ್ಜೆಯಾಗಿದೆ.
ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಕೇಂದ್ರ ಸರ್ಕಾರವು ಮತ್ತೆ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಲಿಂಕ್ ಮಾಡುವ ಗಡುವನ್ನು ವಿಸ್ತರಣೆ ಮಾಡಿದೆ. ಪ್ರಸ್ತುತ ಎಲ್ಲ ಪ್ರಮುಖ ದಾಖಲೆಗಳಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವುದನ್ನು ಸರ್ಕಾರವು ಕಡ್ಡಾಯಗೊಳಿಸುತ್ತಿದೆ. ಆಧಾರ್ ಲಿಂಕ್ ಮಾಡದಿದ್ದರೆ ದಾಖಲೆಗಳು ನಿಷ್ಕ್ರೀಯವಾಗಲಿದೆ ಎಂದು ವರದಿಯು ಆಗಿದೆ. ಇನ್ನು ನಮ್ಮ ಪ್ರಮುಖ ದಾಖಲೆಗಳಲ್ಲಿ ರೇಷನ್ ಕಾರ್ಡ್ ಕೂಡಾ ಒಂದಾಗಿದೆ.
ಸರ್ಕಾರದಿಂದ ಸಬ್ಸಿಡಿ ಆಧಾರಿತವಾಗಿ ಅಕ್ಕಿ, ಧಾನ್ಯ, ಸೀಮೆ ಎಣ್ಣೆಯನ್ನು ರೇಷನ್ ಕಾರ್ಡ್ ಮೂಲಕ ಪಡೆಯಲು ಸಾಧ್ಯವಾಗುತ್ತದೆ. ಸುಮಾರು ಐದು ದಶಕಗಳ ಹಿಂದೆಯೇ ಈ ರೇಷನ್ ಕಾರ್ಡ್ ಅನ್ನು ಅಂದಿನ ಸರ್ಕಾರವು ಪರಿಚಯಿಸಿದೆ. ಈಗ ರೇಷನ್ ಕಾರ್ಡ್ಗೆ ನೀವು ಆಧಾರ್ ಲಿಂಕ್ ಮಾಡಬೇಕಾಗಿದೆ. ಹಲವು ದಶಕಗಳ ಹಿಂದೆ ಪರಿಚಯಿಸಲ್ಪಟ್ಟ ರೇಷನ್ ಕಾರ್ಡ್ ಇಂದಿಗೂ ಕೂಡಾ ಅತೀ ಪ್ರಮುಖವಾದ ದಾಖಲೆಯಾಗಿದೆ.
ರೇಷನ್ ಕಾರ್ಡ್ ಮೂಲಕ ನಾವು ಅಗತ್ಯ ಆಹಾರ ಧಾನ್ಯಗಳನ್ನು ಕಡಿಮೆ ದರದಲ್ಲಿ ಪಡೆಯಲು ಸಾಧ್ಯವಾಗುವುದು ಮಾತ್ರವಲ್ಲದೆ, ಇದು ನಾವು ಭಾರತ ದೇಶದ ಪ್ರಜೆ ಎಂಬುವುದಕ್ಕೆ ಸಾಕ್ಷಿ ಕೂಡಾ ಹೌದು. ಈಗ ಕೇಂದ್ರ ಸರ್ಕಾರವು ರೇಷನ್ ಕಾರ್ಡ್ಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವ ಗಡುವನ್ನು ವಿಸ್ತರಣೆ ಮಾಡಿದೆ.
Aadhaar Ration Card link:ಆಧಾರ್ ಜೊತೆ ರೇಷನ್ ಕಾರ್ಡ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ಮೊದಲು ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ, ಇ-ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ "ಯುಐಡಿ ಲಿಂಕ್ ಮಾಡಿ" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ UID linking for RC members ಮೇಲೆ ಕ್ಲಿಕ್ ಮಾಡಿ
ನಂತರ ಆಧಾರ್ ನಂಬರ್ Select ಮಾಡಿ,ಆಧಾರ್ ನಂಬರ್ ಹಾಕಿ,Go ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,Go ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಆಧಾರ್ ನಂಬರ್ ರೇಷನ್ ಕಾರ್ಡ್ ಗೆ ಲಿಂಕ್ ಆಗುತ್ತದೆ.
ಆಫ್ ಲೈನ್ ಮೂಲಕ ನಿಮ್ಮ ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಗೆ ಲಿಂಕ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:
ಹಂತ 1: ಹತ್ತಿರದ PDS ಕೇಂದ್ರ ಅಥವಾ ಪಡಿತರ ಅಂಗಡಿ/ಸ್ಥಳೀಯ ಪಡಿತರ ಕಚೇರಿಗೆ ಭೇಟಿ ನೀಡಿ
ಹಂತ 2: ನಿಮ್ಮ ಎಲ್ಲಾ ಕುಟುಂಬ ಸದಸ್ಯರ ಆಧಾರ್ ಕಾರ್ಡ್ನ ನಕಲುಗಳ ಜೊತೆಗೆ ನಿಮ್ಮ ಪಡಿತರ ಚೀಟಿಯ ನಕಲು ಪ್ರತಿಗಳನ್ನು ತೆಗೆದುಕೊಳ್ಳಬೇಕು. ಅಲ್ಲದೆ, ಕುಟುಂಬದ ಮುಖ್ಯಸ್ಥರ ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ತೆಗೆದುಕೊಳ್ಳಿ.
ಹಂತ 3: ನಿಮ್ಮ ಬ್ಯಾಂಕ್ ಖಾತೆಯು ಆಧಾರ್ನೊಂದಿಗೆ ಲಿಂಕ್ ಮಾಡದಿದ್ದರೆ, ನಿಮ್ಮ ಬ್ಯಾಂಕ್ ಪಾಸ್ಬುಕ್ನ ನಕಲನ್ನು ಸಹ ನೀವು ಸಲ್ಲಿಸಬೇಕಾಗುತ್ತದೆ.
ಹಂತ 4: ಈ ಎಲ್ಲಾ ದಾಖಲೆಗಳನ್ನು ನಿಮ್ಮ ಆಧಾರ್ನ ಪ್ರತಿಯೊಂದಿಗೆ PDS ಅಂಗಡಿಯಲ್ಲಿ ಸಲ್ಲಿಸಿ.
ಹಂತ 5: ಪಡಿತರ ಅಂಗಡಿಯಲ್ಲಿ ಲಭ್ಯವಿರುವ ಪ್ರತಿನಿಧಿಯು ಮೊದಲ ಬಾರಿಗೆ ಆಧಾರ್ ದೃಢೀಕರಣಕ್ಕಾಗಿ ಫಿಂಗರ್ಪ್ರಿಂಟ್ ದೃಢೀಕರಣಕ್ಕಾಗಿ ನಿಮ್ಮನ್ನು ಕೇಳಬಹುದು.
ದಾಖಲೆಗಳನ್ನು ಸಲ್ಲಿಸಿದ ನಂತರ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ SMS ಅಧಿಸೂಚನೆಯನ್ನು ಕಳುಹಿಸಲಾಗುತ್ತದೆ. ಎರಡು ಡಾಕ್ಯುಮೆಂಟ್ಗಳನ್ನು ಯಶಸ್ವಿಯಾಗಿ ಲಿಂಕ್ ಮಾಡಿದಾಗ ನೀವು ಇನ್ನೊಂದು SMS ಅಧಿಸೂಚನೆಯನ್ನು ಸ್ವೀಕರಿಸುತ್ತೀರಿ.
ಆಗ ನೀವು ಸಂಪೂರ್ಣವಾಗಿ ಆಫ್ ಲೈನ್ ಮೂಲಕ ration card ಆಧಾರ್ ಕಾರ್ಡ್ ಗೆ ಲಿಂಕ್ ಮಾಡುವದು ಪೂರ್ಣವಾಗುತ್ತದೆ.
ರೇಷನ್ ಕಾರ್ಡ್ ಆಧಾರ್ ಲಿಂಕ್ ಮಾಡಲು ಅಪ್ಲೋಡ್ ಮಾಡಬೇಕಾದ ದಾಖಲೆಗಳನ್ನು ಕೆಳಗೆ ನೀಡಲಾಗಿದೆ:
ಮೂಲ ಪಡಿತರ ಚೀಟಿಯ ನಕಲು ಪ್ರತಿ
ನಿಮ್ಮ ಎಲ್ಲಾ ಕುಟುಂಬ ಸದಸ್ಯರ ಆಧಾರ್ ಕಾರ್ಡ್ನ ಫೋಟೋಕಾಪಿಗಳು
ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್ನ ಫೋಟೋಕಾಪಿ
ಬ್ಯಾಂಕ್ ಪಾಸ್ ಬುಕ್ ನ ಪ್ರತಿ
ಕುಟುಂಬದ ಮುಖ್ಯಸ್ಥನ ಎರಡು ಪಾಸ್ಪೋರ್ಟ್ ಅಳತೆಯ ಫೋಟೋಗಳು.
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ಗೆ 8 ಸಾವಿರ ರೂ.ವಿನಂತೆ ತೊಗರಿ ಖರೀದಿಸಲು ರಾಜ್ಯದಲ್ಲಿ 330 ತೊಗರಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.
ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳು ಪ್ರಾರಂಭಿಸಲಾಗಿದೆ.
ರೈತರು ತಮ ಹತ್ತಿರದ ಪಿಎಸಿಎಸ್/ಎಫ್ಪಿಒ/ಟಿಅಪಿಸಿಎಂಎಸ್ ಗಳಿಗೆ ಭೇಟಿ ನೀಡಿ ನೊಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸುದುಪಯೋಗ ಪಡೆದುಕೊಳ್ಳುವಂತೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2024-25ನೇ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಭಂಧಿಸಿದಂತೆ, ಕೇಂದ್ರ ಸರ್ಕಾರದ ಬೆಂಬಲ ಬೆಲೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹಧನ 450 ರೂ. ಪ್ರತಿ ಕ್ವಿಂಟಾಲಗೆ, ಸೇರಿ ಒಟ್ಟು 8,000 ರೂ. ಪ್ರತಿ ಕ್ವಿಂಟಾಲ ರಂತೆ ತೊಗರಿ ಖರೀದಿಸಲು ಅವರು ಭರವಸೆ ನೀಡಿದ್ದರು.
ಈ ಸಂಬಂಧ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ಆರ್ಥಿಕ ಇಲಾಖೆಯೂ ಸಹ ಸಹಮತಿ ನೀಡಿದೆ. ಇದಕ್ಕೆ ಸಂಬಂಧಿಸಿದ ಇಲಾಖೆಗೆ ತಕ್ಷಣದಿಂದ ಅಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
2023ರ ಮುಂಗಾರು ಹಂಗಾಮಿನಲ್ಲಿ ತೊಗರಿ ನೆಟೆರೋಗದಿಂದ ನಷ್ಟಗೊಂಡ ರಾಜ್ಯದ ರೈತರಿಗೆ ಸರ್ಕಾರವು ₹233 ಕೋಟಿ ಪರಿಹಾರ ವಿತರಿಸಿದೆ. ಕಲಬುರಗಿ, ಯಾದಗಿರಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ರೈತರಿಗೆ ಈ ಸಹಾಯ ಲಭ್ಯವಾಗಿದ್ದು, ಕೃಷಿ ಚಟುವಟಿಕೆ ಪುನಶ್ಚೇತನಗೊಳ್ಳಲು ಇದು ಮಹತ್ವದ ಹೆಜ್ಜೆಯಾಗಿದೆ.
ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಭಗವಾನ್ ಬಾಲರಾಮನ ದರ್ಶನ ಬಯಸುವ ಭಕ್ತರಿಗೆ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ವೆಬ್ಸೈಟ್ನಲ್ಲಿ ನಿರ್ದಿಷ್ಟ ಸಮಯದ ಸ್ಲಾಟ್ಗಳನ್ನು ಒದಗಿಸಿದೆ. ಇದರಂತೆ ನಿತ್ಯ ಬೆಳಿಗ್ಗೆ 6 ರಿಂದ 11:30 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 9 ರವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರಲಿದೆ.ಆನ್ಲೈನ್ ಮೂಲಕ ಬುಕ್ಕಿಂಗ್ ಮಾಡಿದರೆ ಕಿಲೊಮಿಟರ್ ಗಟ್ಟಲೇ ಸಾಲಿನಲ್ಲ ಕಾಯದೆ ಕೇವಲ 5 ರಿಂದ 10 ನಿಮಿಷದಲ್ಲಿ ಅಯೊದ್ಯಾ ರಾಮ ಮಂದಿರ ದರ್ಶನ ಮಾಡಬಹುದು.
ಆರತಿಗೂ ಸಹ ಬುಕ್ಕಿಂಗ್ ಮಾಡಬಹುದು
ಬೆಳಗ್ಗೆ ಬಾಲರಾಮನ ಆರತಿ ಸಮಯ 6.30ಕ್ಕೆ ಇದ್ದು, ಜಾಗರಣ/ ಶೃಂಗಾರ ಎಂದು ನಮೂದಿಸಲಾಗಿದೆ. ಸಂಜೆ 7:30 ಕ್ಕೆ ಸಂಧ್ಯಾ ಆರತಿಯನ್ನು ಒಳಗೊಂಡಿದೆ. ಆಫ್ಲೈನ್ ಮತ್ತು ಆನ್ಲೈನ್ ಎರಡರಲ್ಲೂ 'ಆರತಿ' ಗಾಗಿ ಪಾಸ್ಗಳನ್ನು ಪಡೆಯಬಹುದು. ಆಫ್ಲೈನ್ ಪಾಸ್ಗಳು ಶ್ರೀ ರಾಮ ಜನ್ಮಭೂಮಿಯ ಶಿಬಿರ ಕಚೇರಿಯಲ್ಲಿ ಲಭ್ಯವಿದ್ದು, ಮಾನ್ಯ ಸರ್ಕಾರಿ ಗುರುತಿನ ಪುರಾವೆ ಒದಗಿಸುವ ಅಗತ್ಯವಿದೆ.
ಆನ್ಲೈಲ್ ಬುಕ್ಕಿಂಗ್ ಹೀಗೆ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ click here to"Reserve your free passes for experiencing Aarti and Darshana of Ramalalla"
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ Free Sugama Darshana ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ,Get OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Login ಮೇಲೆ ಕ್ಲಿಕ್ ಮಾಡಿ
ನಂತರ Select Devotees ಮೇಲೆ ಕ್ಲಿಕ್ ಮಾಡಿ,ನೀವು ಎಷ್ಟು ಜನ ದರ್ಶನ ಮಾಡಲು ಹೊಗುತ್ತಿದ್ದೀರಾ, ಅಷ್ಟು ಸಂಖ್ಯೆಯನ್ನು Select ಮಾಡಿ
ನಂತರ ನೀವು ದರ್ಶನ ಮಾಡಲು ಬಯಸುವ ದಿನಾಂಕವನ್ನು Select ಮಾಡಿ
ನಂತರ ದರ್ಶನದ ಸಮಯವನ್ನು select ಮಾಡಿ,Proceed ಮೇಲೆ ಕ್ಲಿಕ್ ಮಾಡಿ
(ಸೂಚನೆ-ನೀವು ದರ್ಶನ ಮಾಡುವ ದಿನಾಂಕದಿಂದ 15 ದಿನ ಮೊದಲೇ ಬುಕ್ಕಿಂಗ್ ಗೆ ಅವಕಾಶ ಇರುತ್ತದೆ.ರಾತ್ರಿ 12 ಗಂಟೆಯಿಂದ 1 ಗಂಟೆಯೊಳಗಡೆ ಬುಕ್ ಮಾಡುವವರಿಗೆ ಮಾತ್ರ ಅವಕಾಶ ಸಿಗಲಿದೆ)
ನಂತರ ನಿಮ್ಮ ವಯಕ್ತಿಕ ಮಾಹಿತಿಯನ್ನು ತುಂಬಿ(ಹೆಸರು,ವಯಸ್ಸು,ಲಿಂಗ,ಆಧಾರ್ ನಂಬರ್ ಹಾಕಿ), ಒಬ್ಬ ವ್ಯಕ್ತಿಯ passport size photo ಅಪ್ಲೊಡ್ ಮಾಡಿ,ಈ ಕೆಳಗಿನಂತೆ ನಿಮ್ಮ Free pass ಡೌನ್ಲೊಡ್ ಮಾಡಿಕೊಂಡು,ಅದನ್ನು ದೇವಸ್ಥಾನ ಪ್ರವೇಶಿಸುವ ಮೊದಲು ತೋರಿಸಿದರೆ ನಿಮಗೆ ಉಚಿತವಾಗಿ ಕೇವಲ 5 ರಿಂದ 10 ನಿಮಿಷದಲ್ಲಿ ಸುಗಮ ದರ್ಶನವಾಗಲಿದೆ.
(ಸೂಚನೆ-ವಯಸ್ಸಾದವರಿಗೆ ವಿಲ್ ಚೇರ್ ಸೌಲಭ್ಯವಿದ್ದು,ಬುಕ್ಕಿಂಗ್ ಮಾಡುವಾಗ select ಮಾಡಿದರೆ,150 ರೂಪಾಯಿಗೆ ವಿಲ್ ಚೇರ್ ದುಡಿಕೊಂಡು ಹೊಗಲು ಒಬ್ಬ ಸಹಾಯಕರನ್ನು ಒದಗಿಸುತ್ತಾರೆ)
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿದರೆ ನಿಮಗೆ pdf download ಮಾಡಿಕೊಂಡು ನಿಮ್ಮ ಹೆಸರು ಚೆಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>ಕೃಷಿ ಅಧಿಕಾರಿಗಳು | 86 RPC + 42HK :128 ಒಟ್ಟು |
ಸಹಾಯಕ ಕೃಷಿ ಅಧಿಕಾರಿಗಳು | 586 RPC + 231 HK : 817 ಒಟ್ಟು |
ಕೃಷಿ ಇಲಾಖೆಯಲ್ಲಿ ಭರ್ತಿ ಮಾಡುವ ಒಟ್ಟು ಹುದ್ದೆಗಳ ಸಂಖ್ಯೆ | 945 |
ಅಧಿಸೂಚನೆ ಬಿಡುಗಡೆ ಆದ ದಿನಾಂಕ | 20-09-2024 |
ಆನ್ಲೈನ್ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ | 03-01-2025 |
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ | 15-02-2025 |
ಕೃಷಿ ಅಧಿಕಾರಿ / ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ ವಿವರ
ಕೃಷಿ ಇಲಾಖೆ ಹುದ್ದೆಗಳಿಗೆ ವರ್ಗಾವಾರು ನಿಗದಿತ ಕನಿಷ್ಠ, ಗರಿಷ್ಠ ವಯಸ್ಸಿನ ಅರ್ಹತೆಗಳು
ಕೃಷಿ ಇಲಾಖೆ ಹುದ್ದೆಗಳಿಗೆ ಅರ್ಜಿ ಶುಲ್ಕ ವಿವರ
ನೋಟಿಫಿಕೇಶನ್ ಹಾಗೂ ಇತರೆ ಹೆಚ್ಚಿನ ಮಾಹಿತಿಗಳಿಗಾಗಿ https://www.kpsc.kar.nic.in/notification.html ವೆಬ್ಸೈಟ್ಗೆ ಭೇಟಿ ನೀಡಿರಿ.
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಫೆಬ್ರುವರಿ 24ರಂದು ಬಿಡುಗಡೆ ಆಗಲಿದೆ . ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ-Pmkisan beneficiary status
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಮೊದಲು know your status ಮೇಲೆ ಕ್ಲಿಕ್ ಮಾಡಿ
ನಂತರ know your register number ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ
ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.
ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ
ನಂತರ update your details ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ
Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.
ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ
Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.
FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ ಕಾರಣ ಮತ್ತು ಪರಿಹಾರ
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
fruitspmk.gov.in ಪೋರ್ಟಲ್ ನಲ್ಲಿ |
|||
1 |
ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ |
ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು |
ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ (NIC) ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ. ಆ) ಸಮಸ್ಯಾತ್ಮಕ ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ. |
2 |
ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು |
ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ |
ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ |
3 |
ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು |
ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ |
ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ |
4 |
ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ |
ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ |
OPERATOR ಲಾಗಿನ್ (RSK, ADA office, JDA office) OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು |
5 |
01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ |
ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ |
ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ) |
6 |
Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು |
ಜಿಲ್ಲೆಗಳಲ್ಲಿ OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ |
AAO ಲಾಗಿನ್ (RSK, ADA office, JDA office) AAO ಲಾಗಿನ್ನಲ್ಲಿ ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ, ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
7 |
ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ |
ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ) |
AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ. |
8 |
PFMS rejected |
Aadhaar Number is not seeded in NPCI |
ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ |
Bank Name And IFSC Code are not related to each other |
ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ |
||
Bank Name is not as per PFMS Bank Master. |
|||
Beneficiary is rejected as Account Type is other than SB / SBA / JD |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ) |
||
Duplicate Beneficiary Name , Bank Account No and Bank Name not allowed for same scheme |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
IFSC Code either not present or currently inactive in tbl BankBranch |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
Incorrect Aadhaar Number |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
One or more mandatory tags values are missing. |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
||
Rejected by Bank, Account No does not exist in Bank/INVALID/CLOSED |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
9 |
Amount credited to Account Number-NA |
Aadhaar number based payment by GoI |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ. |
10 |
PAYMENT STOPPED BY STATE |
XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ |
ಕೇಂದ್ರ ಸರ್ಕಾರ |
11 |
Transaction failed |
ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ. |
12 |
ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ |
OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ |
ಕೇಂದ್ರ ಸರ್ಕಾರ |
13 |
ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು |
ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ. |
ಕೇಂದ್ರ ಸರ್ಕಾರ ದ pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ. |
ಕಷ್ಟದಲ್ಲಿರುವ ರೈತರಿಗೆ ಆರ್ಥಿಕ ನೆರವು ಒದಗಿಸಲು ಕೇಂದ್ರ ಸರ್ಕಾರ ಮಹತ್ವದ ಯೋಜನೆಗಳನ್ನು ಪರಿಚಯ ಮಾಡಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ಪೈಕಿ ರೈತರಿಗೆ ವಿಶೇಷ ಕಿಸಾನ್ ಕ್ರೆಡಿಟ್ ಕಾರ್ಡ್ ಸ್ಕೀಮ್ ಕೂಡ ಒಂದು.ಕಿಸಾನ್ ಕ್ರೆಡಿಟ್ ಕಾರ್ಡ್ (kisan credit card) ನೀಡುವ ಮುಖ್ಯ ಉದ್ದೇಶ ದೇಶದ ಕೋಟ್ಯಾಂತರ ರೈತರಿಗೆ ಹಣಕಾಸಿನ ನೆರವು ಒದಗಿಸುವುದು.
ಕೃಷಿ ಸಾಲ ಪಡೆಯುವುದು ಹೇಗೆ?(How to get loan through Kisan credit card)
ದೇಶದ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಕೃಷಿ ಸಾಲ ಪಡೆಯಬಹುದು. ಅದರಲ್ಲೂ ಸರಿಯಾದ ಸಮಯದಲ್ಲಿ ಲೋನ್ ರೀ ಪೇಮೆಂಟ್ ಮಾಡಿದವರಿಗೆ ಬಡ್ಡಿಯಲ್ಲಿ ಸಬ್ಸಿಡಿ ಕೂಡ ಸಿಗಲಿದೆ. ಯಾವುದೇ ಜಾಮೀನು ಇಲ್ಲದೆ ಬರೋಬ್ಬರಿ 1.60 ಲಕ್ಷದವರೆಗೆ ಸಾಲ ನೀಡಲಾಗುತ್ತದೆ. ಇದಕ್ಕೆ ವಿಮೆ ಕೂಡ ಮಾಡಿಸಬಹುದು.
ಕಿಸಾನ್ ಕ್ರೆಡಿಟ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸುವುದು ಹೇಗೆ?(How to apply for Kisan credit card)
ರೈತರು ಯಾವುದೇ ಬ್ಯಾಂಕ್ನಲ್ಲಿ ಬೇಕಾದ್ರೂ ಕಿಸಾನ್ ಕ್ರೆಡಿಟ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಬಹುದು. ಆದರೆ, ಒಂದು ಕಂಡೀಷನ್ ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಮಾತ್ರ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲಾಗುತ್ತದೆ.ನೀವು ಪಡೆಯುವ ಬೆಳೆಸಾಲವನ್ನು ಕಿಸಾನ್ ಕ್ರೇಡಿಟ್ ಕಾರ್ಡ್ ಮೂಲಕ ನೀಡಲಾಗುತ್ತದೆ.
ಕ್ರೆಡಿಟ್ ಕಾರ್ಡನ್ನು ಯಾರು ಪಡೆಯಬಹುದು?(Kisan credit card eligibility)
ರೈತರು ಯಾರು ಬೇಕಾದ್ರೂ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಬಹುದು. ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ರೂ. 3,00,000 ಇರಲಿದೆ. ಕ್ರೆಡಿಟ್ ಸ್ಕೋರ್ ಚೆನ್ನಾಗಿದ್ರೆ ಹೆಚ್ಚು ಸಾಲು ಕೂಡ ಸಿಗುತ್ತದೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಬಡ್ಡಿ ದರ ಎಷ್ಟು?(kisan credit card interest)
ಬಡ್ಡಿ ದರ ಕೇವಲ ಶೇ. 7 ರಷ್ಟಿದೆ, ಅದರಲ್ಲೂ 3 ರಷ್ಟು ಬಡ್ಡಿ ರಿಯಾಯಿತಿ ಇದೆ.
Kisan credit card loan-ನಿಮ್ಮ ಕಿಸಾನ್ ಕ್ರೆಡಿಟ್ ಕಾರ್ಡ್ ನಲ್ಲಿ ಎಷ್ಟು ಸಾಲ ಇದೆ? ಇನ್ನೂ ಎಷ್ಟು ಸಾಲ ಪಡೆಯಬಹುದು ಹೀಗೆ ಚೆಕ್ ಮಾಡಿ
ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು
https://landrecords.karnataka.gov.in/Service2/
ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ.
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಇದನ್ನೂ ಓದಿ
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427
ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್(Survey number) ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ(Survey number) ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ(crop loan) ಪಡೆಯಲಾಗಿದೆ. ಎಂಬ ಮಾಹಿತಿ ಇರುತ್ತದೆ.ಕಿಸಾನ್ ಕ್ರೆಡಿಟ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಪಡೆಯಲು ಅವಕಾಶ ಇರುವುದರಿಂದ,ಸಾಲದ ವಿವರ ನೊಡಿಕೊಂಡು ಉಳಿದ ಸಾಲ ಪಡೆಯಬಹುದು.
ಇದನ್ನೂ ಓದಿ
Waqf board property-ಸರ್ವೆ ನಂಬರ್ ಹಾಕಿ ನಿಮ್ಮ ಪಹಣೆ ನಿಮ್ಮ ಹೆಸರಿನಲ್ಲಿದೆಯೊ ಅಥವಾ ಬೇರೆಯವರ ಹೆಸರಿನಲ್ಲಿದೆಯೊ ಚೆಕ್ ಮಾಡಿಕೊಳ್ಳಿ - https://krushirushi.in/Waqf-board-property-1672
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
2023ರ ಮುಂಗಾರು ಹಂಗಾಮಿನಲ್ಲಿ ತೊಗರಿ ನೆಟೆರೋಗದಿಂದ ನಷ್ಟಗೊಂಡ ರಾಜ್ಯದ ರೈತರಿಗೆ ಸರ್ಕಾರವು ₹233 ಕೋಟಿ ಪರಿಹಾರ ವಿತರಿಸಿದೆ. ಕಲಬುರಗಿ, ಯಾದಗಿರಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ರೈತರಿಗೆ ಈ ಸಹಾಯ ಲಭ್ಯವಾಗಿದ್ದು, ಕೃಷಿ ಚಟುವಟಿಕೆ ಪುನಶ್ಚೇತನಗೊಳ್ಳಲು ಇದು ಮಹತ್ವದ ಹೆಜ್ಜೆಯಾಗಿದೆ.
ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್(Survey number) ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.
ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ(Bele sala) ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.
ಸಾಲ(crop loan status)ವಿವರ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು
https://landrecords.karnataka.gov.in/Service2/
ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ.
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಇದನ್ನೂ ಓದಿ
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427
ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ. ಎಂಬ ಮಾಹಿತಿ ಇರುತ್ತದೆ.
ಈ ಮಾಹಿತಿ ರೈತರಿಗೆ ತುಂಬಾ ಅನುಕೂಲವಾಗಿದೆ ಸರ್ವೇ ನಂಬರ್ ನಮೂದಿಸಿದರೆ ಸಾಕು ರೈತರು ದೇಶದ ಯಾವುದೇ ಮೂಲೆಯಿಂದಲೂ ಮಾಹಿತಿ ಪಡೆಯಬಹುದು. ಕೇವಲ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವ ಮಾಹಿತಿ ಎಲ್ಲವೂ ರೈತರಿಗೆ ಸಿಗಲಿದೆ.
ರಾಜ್ಯದ ಜನತೆಗೆ ಸಂತಸದ ಸುದ್ದಿ. 2025-26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಸಹಕಾರ ಇಲಾಖೆ ಮಾರ್ಚ 31ರವರೆಗೆ ಅವಕಾಶ ಕಲ್ಪಿಸಿದೆ.
ಗ್ರಾಮೀಣ ಪ್ರದೇಶದ ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ ಆ ಕುಟುಂಬ 500 ರೂಗಳ ವಂತಿಗೆ ಭರಿಸಬೇಕು. ನಾಲ್ಕಕ್ಕಿಂತ ಹೆಚ್ಚು ಸದಸ್ಯರಿದ್ದರೆ ತಲಾ 100 ರೂಗಳ ಹೆಚ್ಚುವರಿ ವಂತಿಗೆ ನೀಡಬೇಕು. ನಗರ ಪ್ರದೇಶದ ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ 1,000 ರೂಗಳು ಹಾಗೂ ಅದಕ್ಕಿಂತ ಹೆಚ್ಚು ಜನರಿದ್ದರೆ ತಲಾ 200 ರೂಗಳು ನಿಗದಿ ಮಾಡಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರಿಗೆ ಉಚಿತ ಸದಸ್ಯತ್ವ
ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರು ಉಚಿತವಾಗಿ ಸದಸ್ಯತ್ವ ಪಡೆಯಬಹುದು. ಈ ಯೋಜನೆ ಅಡಿ 1650 ವಿವಿಧ ಚಿಕಿತ್ಸೆಗಳು, 478 ಐಸಿಯು ಚಿಕಿತ್ಸೆಗಳು ಸೇರಿ ಒಟ್ಟು 2,128 ಚಿಕಿತ್ಸೆಗಳಿಗೆ ನಗದುರಹಿತ ಸೌಲಭ್ಯ ದೊರಕಲಿದೆ.
Yashsvini yojane-ಯಶಸ್ವಿನಿ ಯೋಜನೆಯಡಿ ಉಚಿತವಾಗಿ ಸಿಗಲಿವೆ ಈ ಸೌಲಭ್ಯಗಳು
2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಹೊಸ ಸದಸ್ಯರ ನೋಂದಣಿಗೆ ಅವಕಾಶ ನೀಡಲಾಗಿದೆ.
ದಿನಾಂಕ 1/1/2024 ರಿಂದ ಯಶಸ್ವಿನಿ ನೊಂದಣೆ ಆರಂಭಗೊಂಡಿದ್ದು ದಿನಾಂಕ 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ.
ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತರ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ. 100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.
ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬAಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.
ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ನೆಟ್ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್ಡಿ ನಂಬರ್ ತರುವುದು ಕಡ್ಡಾಯವಾಗಿದೆ.
ಈ ಕೆಳಕಂಡ ಸೌಲಭ್ಯಗಳನ್ನು ಯಶಸ್ಮಿನಿ ಸದಸ್ಯರಿಗೆ ಒದಗಿಸಲಾಗುವುದು.
ಎ) ಪ್ರಸ್ತುತ ಯಶಸ್ಸಿನಿ ಯೋಜನೆಯಡಿಯಲ್ಲಿ ಟ್ರಸ್ಟ್ ಗುರ್ತಿಸಿದ 1650 ವಿವಿಧ ಚಿಕಿತ್ಸೆಗಳು ಮತ್ತು 478 ICU ಚಿಕಿತ್ಸೆಗಳೂ ಸೇರಿದಂತೆ ಒಟ್ಟು 2128 ಚಿಕಿತ್ಸೆಗಳನ್ನು ಅಳವಡಿಸಿಕೊಳ್ಳಲಾಗಿದೆ.
ಬಿ) ರೋಗಿಗಳಿಗೆ ಸದರಿ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದಲ್ಲಿ ನೋಂದಾಯಿಸಿದ ಯಶಸ್ಸಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಒದಗಿಸಲಾಗುವುದು. ನೆಟ್ವರ್ಕ್ ಆಸ್ಪತ್ರೆಗಳನ್ನು ಹೊರತುವಡಿಸಿ ಇತರೆ ಆಸ್ಪತ್ರೆಗಳಲ್ಲಿ ಯಶಸ್ವಿನಿ ಯೋಜನೆಯ ಸೇವೆ ಲಭ್ಯವಿರುವುದಿಲ್ಲ. ಯಶಸ್ಸಿನಿ ಯೋಜನೆಯಡಿ ಫಲಾನುಭವಿ ಚಿಕಿತ್ಸೆ ಪಡೆಯುವ ಮೊದಲು ಆಸ್ಪತ್ರೆಯು ಯೋಜನೆಗೆ ಒಳಪಟ್ಟಿರುವ ಬಗ್ಗೆ, ಖಾತ್ರಿ ಪಡಿಸಿಕೊಂಡು ನಂತರ ಚಿಕಿತ್ಸೆ ಪಡೆಯತಕ್ಕದ್ದು.
ಸಿ) ಯೋಜನೆಯಲ್ಲಿ ಒಳವಡದ ಚಿಕಿತ್ಸೆಗಳ ಮತ್ತು ಟ್ರಸ್ಟ್ ಅಂಗೀಕರಿಸದ ಆಸ್ಪತ್ರೆಗಳಲ್ಲಿ ಪಡೆದಂತಹ ಚಿಕಿತ್ಸೆಗಳಿಗೆ ಯಶಸ್ವಿನಿ ಟ್ರಸ್ಟ್ ಜವಾಬ್ದಾರರಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಆಸ್ಪತ್ರೆಗಳಿಗಾಗಲಿ ಅಥವಾ ಫಲಾನುಭವಿಗಳಿಗಾಗಲಿ ಚಿಕಿತ್ಸಾ ವೆಚ್ಚವನ್ನು ಪಾವತಿಸಲಾಗುವುದಿಲ್ಲ.
ಡಿ) ಎರಡು ಜೀವಂತ ಮಕ್ಕಳು ಅಥವಾ ಎರಡು ಹೆರಿಗೆಗೆ ಮಾತ್ರ ಯಶಸ್ವಿನಿ ಯೋಜನೆಯಲ್ಲಿ ಸೌಲಭ್ಯ ದೊರೆಯುತ್ತದೆ.
ಇ) ಯಶಸ್ವಿನಿ ಯೋಜನೆಯ ಪ್ರೋಟೋಕಾಲ್ ಪ್ರಕಾರ ಯಶಸ್ವಿನಿ ಫಲಾನುಭವಿಗಳು ಜನರಲ್ ವಾರ್ಡನಲ್ಲಿ ಮಾತ್ರ ಚಿಕಿತ್ಸೆ ವಡೆಯಲು ಅರ್ಹರಿರುತ್ತಾರೆ. ಒಂದು ವೇಳೆ ಯೋಜನೆಯಡಿ ನಿಗದಿಪಡಿಸಿರುವ ಜನರಲ್ ವಾರ್ಡ್ ಬದಲಾಗಿ ಉನ್ನತ(Semi Special Ward Or Special Ward)ನಲ್ಲಿ ಚಿಕಿತ್ಸೆ ಪಡೆಯಲು ಇಚ್ಚಿಸಿದಲ್ಲಿ ಸದರಿ ಫಲಾನುಭವಿಗಳಿಗೆ ಯೋಜನೆಯಡಿ ನಿಗದಿ ಪಡಿಸಿರುವಂತೆ ಜನರಲ್ ವಾರ್ಡಗೆ ಅನ್ವಯಿಸುವ ಚಿಕಿತ್ಸೆಯ ವೆಚ್ಚವನ್ನು ಮಾತ್ರ ಭರಿಸಲಾಗುವುದು. ಉನ್ನತ ವಾರ್ಡ್/ಸ್ಪೆಷಲ್ ವಾರ್ಡಿಗೆ ಆಗುವ ಹೆಚ್ಚುವರಿ ವ್ಯತ್ಯಾಸದ ಚಿಕಿತ್ಸಾ ಮೊತ್ತವನ್ನುಸದರಿ ಫಲಾನುಭವಿಗಳೇ ಭರಿಸತಕ್ಕದ್ದು.
ಎಫ್) ಯಶಸ್ವಿನಿ ಯೋಜನೆಯ ವ್ಯಾಕೇಜಿನಲ್ಲಿ Implants ಅಗತ್ಯವಿರುವ ಕಡೆ Implants ơ. (Ex. Knee replacement, Lens in cataract Surgery) ವೇಳೆ ಫಲಾನುಭವಿಗಳು ಉನ್ನತ Implants ಅಥವಾ Lens ನಡೆಯಲು ಸ್ವ ಇಚ್ಛೆಯಿಂದ ಒಪ್ಪಿಗೆ ಸೂಚಿಸಿದ್ದಲ್ಲಿ, ಅಂತಹ ಉನ್ನತ Implants ಮತ್ತು Lens ಗೆ ತಗಲುವ ವ್ಯತ್ಯಾಸದ ಹೆಚ್ಚುವರಿ ಮೊತ್ತವನ್ನು ಅಂತ ಫಲಾನುಭವಿಗಳೇ ಭರಿಸಿ ಚಿಕಿತ್ಸೆಯನ್ನು ವಡೆಯತಕ್ಕದ್ದು.
ಜಿ) ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಯಶಸ್ಸಿನಿ ಸದಸ್ಯರಿಗೆ ಹೊರ ರೋಗಿ ಚಿಕಿತ್ಸೆಗೆ (OPD) ಗರಿಷ್ಠ ರೂ.200/-ಗಳನ್ನು (ಮೂರು ತಿಂಗಳ ಅವಧಿಗೆ) ಮಿತಿ ನಿಗಧಿಪಡಿಸಿದ್ದು, ಈ ಪೈಕಿ ರೂ.100/- ಗಳನ್ನು ಯಶಸ್ವಿನಿ ಟ್ರಸ್ಟ್ ವತಿಯಿಂದ ವಾವತಿಸಲಾಗುವುದು.
17. ಸದಸ್ಯರ ನೋಂದಣಿಗೆ ಮಾರ್ಗಸೂಚಿಗಳು, ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳ ಯಾದಿ, ಶಸ್ತ್ರಚಿಕಿತ್ಸೆಗಳ ಯಾದಿ ಇವುಗಳನ್ನು ಸಹಕಾರ ಇಲಾಖೆಯ ಸಹಕಾರ ಸಿಂಧು ವೆಬ್ಸೈಟ್ನಲ್ಲಿ/ಟ್ರಸ್ಟ ವೆಬ್ಸೈಟ್ನಲ್ಲೂ ಅಪ್ಲೋಡ್ ಮಾಡಲಾಗುವುದು.
18. ಸದಸ್ಯರು ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಒದಗಿಸತಕ್ಕದು.
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698
]]>
ವರ್ಷದಲ್ಲಿ ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯ (ಪಿಎಂ-ಕಿಸಾನ್) ಫಲಾನುಭವಿಗಳ ಸಂಖ್ಯೆ(pmkisan 19th instalment ineligible list) ಐದು ಲಕ್ಷದಿಂದ ಆರು ಲಕ್ಷದಷ್ಟು ಕುಸಿತವಾಗಿದೆ.
ಲೋಕಸಭೆಯಲ್ಲಿ ಮೈಸೂರು ಸಂಸದ ಯದುವೀರ್ ಒಡೆಯರ್ ಮಂಗಳವಾರ ಕೇಳಿದ ಪ್ರಶ್ನೆಗೆ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್ ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ.
13ನೇ ಕಂತಿನವರೆಗೆ (2023ರ ಮಾರ್ಚ್) ರಾಜ್ಯದ ಫಲಾನುಭವಿಗಳ ಸಂಖ್ಯೆ 49 ಲಕ್ಷದಷ್ಟು ಇತ್ತು. 14ನೇ ಕಂತಿನಲ್ಲೂ ಫಲಾನುಭವಿಗಳ ಸಂಖ್ಯೆ 49.34 ಲಕ್ಷ ಆಗಿತ್ತು. 15ನೇ ಕಂತಿನಲ್ಲಿ ಈ ಸಂಖ್ಯೆ 43.78 ಲಕ್ಷಕ್ಕೆ ಕುಸಿಯಿತು. ಆ ಬಳಿಕ ಸಂಖ್ಯೆಯಲ್ಲಿ ಗಣನೀಯ ಏರಿಕೆ ಆಗಿಲ್ಲ.
ಪಿಎಂ- ಕಿಸಾನ್ ಯೋಜನೆಯಡಿ ಕೃಷಿಕರಿಗೆ ವಾರ್ಷಿಕ ₹6 ಸಾವಿರ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಈ ಮೊತ್ತವನ್ನು ₹8 ಸಾವಿರ ಅಥವಾ ₹12 ಸಾವಿರಕ್ಕೆ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
Pmkisan 19th instalment ineligible list-ಪಿಎಂ ಕಿಸಾನ್ 19ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ಪಿಎಂ ಕಿಸಾನ್ ಸಮ್ಮಾನ ನಿಧಿ 12,000 ಕ್ಕೆ ಏರಿಕೆಗೆ ಪ್ರಸ್ತಾವನೆ, ಯಾರಿಗೆಲ್ಲಾ ಸಿಗಲಿದೆ 19ನೇ ಕಂತು ಹೀಗೆ ಚೆಕ್ ಮಾಡಿ-Pmkisan 19th instalment - https://krushirushi.in/Pmkisan-19th-instalment-1731
]]>
ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಎರಡನೇ ಪೂರ್ಣ ಬಜೆಟ್ ಮಂಡನೆಯಾಗಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಇಂದು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಇಂದು ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವದ ನಿರ್ಮಲಾ ಸೀತಾರಾಮನ್ ಅವರು, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ. ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ.
ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕಿಸಾನ್ ಕ್ರೆಡಿಟ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಮುಂದಿನ ಐದು ವರ್ಷ ಸುಖ ಭಾರತಕ್ಕಾಗಿ ಬಜೆಟ್ ಮಂಡನೆ ಮಾಡಲಾಗುತ್ತಿದ್ದು ದೇಶ ಕೇವಲ ಮಣ್ಣಿಗೆ ಮಾತ್ರವಲ್ಲ ಜನರಿಗಾಗಿ ದೇಶ. ಭಾರತದ ಅರ್ಥವ್ಯವಸ್ಥೆ ವೇಗದ ಗತಿಯಲ್ಲಿ ಬೆಳೆಯುತ್ತಿದೆ. ಯುವಕರು ರೈತರು ಮಧ್ಯಮ ವರ್ಗಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ವಿಕಸಿತ ಭಾರತವೇ ನಮ್ಮ ಸರ್ಕಾರದ ಮೊದಲ ಗುರಿಯಾಗಿದೆ. ರೈತರಿಗಾಗಿ ಕಿಸಾನ್ ಕಾರ್ಡ್ ಸಾಲಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಅಲ್ಲದೆ ರೈತರಿಗಾಗಿ ಮೂರು ಯೂರಿಯಾ ಪ್ಲಾಂಟ್ ನಿರ್ಮಾಣ ಮಾಡಲಾಗುತ್ತದೆ. ಇನ್ನೂ ರಾಷ್ಟ್ರೀಯ ಕೃಷಿ ಮಾರುಕಟ್ಟೆ ಸಂಸ್ಥೆಗಳಾದ ಎನ್ಎಎಫ್ಇಇ, ಎನ್ಸಿಸಿಎಫ್ ಇತ್ಯಾದಿ ಸಂಸ್ಥೆಗಳೊಂದಿಗೆ ರೈತರು ಒಪ್ಪಂದ ಮಾಡಿಕೊಂಡು, ಬೇಳೆಕಾಳುಗಳನ್ನು ಮಾರಬಹುದು. ಇದರಿಂದ ರೈತರಿಗೆ ಸುಲಭ ಮಾರುಕಟ್ಟೆ ಸಿಕ್ಕಂತಾಗುತ್ತದೆ.
2047ಕ್ಕೆ ಬಡತನ ಮುಕ್ತ ಭಾರತ ಕಟ್ಟುವ ಸಂಕಲ್ಪವಾಗಿದೆ. ಹೀಗಾಗಿ ಯುವಕರು ಬಡವ ಮಹಿಳೆ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ವಿಕಾಸಿತ್ ಭಾರತ ಗುರಿಯತ್ತ ಭಾರತ ಮುಂದುವರೆದಿದೆ. ಭಾರತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ದೇಶವಾಗಿದೆ. ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಕೇಂದ್ರೀಕರಿಸಿದೆ. ರಫ್ತು ಪ್ರೋತ್ಸಾಹ ಹೂಡಿಕೆ ಮೇಲೆ ಗಮನ ಹರಿಸಿದೆ.
ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. 5 ಲಕ್ಷ SC-ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ
]]>
ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ (FRUITS ID) ಪ್ರೊಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುದು.
ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.
ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು (FRUITS ID) ಪ್ರೊಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೊಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನುಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ (FRUITS ID) ಪ್ರೊಟ್ಸ್ ಐಡಿ ಸೃಜಿಸಿಕೊಳ್ಳಬಹುದು. (FRUITS ID) ಪ್ರೊಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.
ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್/Aadhaar number ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ
ಬೆಳೆ ಸಮೀಕ್ಷೆ(Bele samikshe) ಮೂಲಕ ಸಂಗ್ರಹಿಸಲಾದ ಬೆಳೆ
ಮಾಹಿತಿ ಕುರಿತು ಆಕ್ಷೇಪಣೆ ಸಲ್ಲಿಸಲು ನ. 20ರವರೆಗೆ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ ದರ್ಶಕ ಮೊಬೈಲ್ ಆ್ಯಪ್(Bele darshaka App)ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ(Crop survey portal) ಮೂಲಕ ಆಕ್ಷೇಪಣೆ ಸಲ್ಲಿಸಬಹುದು.
ಬೆಳೆ ಸಮೀಕ್ಷೆ ದತ್ತಾಂಶವನ್ನು ಬೆಳೆವಿಮೆ(Bele vime), ಬೆಂಬಲ ಬೆಲೆ ಯೋಜನೆಯಡಿ(MSP) ಬೆಳೆ ಮಾರಾಟ ಮಾಡಲು, ಬೆಳೆ ನಷ್ಟ ಪರಿಹಾರ(bele hani) ಹಾಗೂ ಇತರ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಳಕೆ ಮಾಡಲಾಗುವುದು. ಆದ್ದರಿಂದ ರೈತರು ತಾವು ಬೆಳೆದ ಬೆಳೆ ಹಾಗೂ ಬೆಳೆ ಸಮೀಕ್ಷೆಯಲ್ಲಿ (crop survey)ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಖಾತ್ರಿಪಡಿಸಿಕೊಳ್ಳಬೇಕು. ಒಂದು ವೇಳೆ ಭಿನ್ನವಾಗಿದ್ದಲ್ಲಿ, ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ನಂತರದ ಆಕ್ಷೇಪಣೆ ಸ್ವೀಕರಿಸಲಾಗುವುದಿಲ್ಲ.
ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಗೂಗಲ್ ಪ್ಲೇ ಸ್ಟೋರ್ ಮೂಲಕ ಅಥವಾ https://play.google.com/
ನಂತರ ರೈತ select ಮಾಡಿ
ನಂತರ ವರ್ಷ,ಋುತು, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ.
ನಂತರ ಸರ್ವೇ ನಂಬರ್ ಹಾಕಿ,ಹಿಸ್ಸಾಆಯ್ಕೆ ಮಾಡಿ,ಸಮೀಕ್ಷೆಯ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ನಂತರ ಬೆಳೆವಿವರ ವೀಕ್ಷಿಸಿ ಮೇಲೆ ಕ್ಲಿಕ್ ಮಾಡಿ
ನಂತರ photo ಮೇಲೆ ಕ್ಲಿಕ್ ಮಾಡಿದರೆ ನೀವು ಬೆಳೆದ ಬೆಳೆ ಹಾಗೂ ಫೋಟೊ ಅಪ್ಲೊಡ್ ಸರಿಯಾಗಿರುವುದನ್ನು ಪರಿಕ್ಷೀಸಿ.
ಬೆಳೆ ಸಮಿಕ್ಷೆ ಸರಿಯಾಗಿರದಿದ್ದರೆ,ಫೆಬ್ರುವರಿ 15ರೊಳಗೆ ಆಕ್ಷೇಪಣೆ ಸಲ್ಲಿಸಿದರೆ, ಪುನಃ ಬೆಳೆ ಸಮಿಕ್ಷೆ ಮಾಡಿ ಸರಿಪಡಿಸಲು ಅವಕಾಶವಿರುತ್ತದೆ.
ಏನಿದು ಬೆಳೆ ದರ್ಶಕ ಆ್ಯಪ್?
ಈ ಅಪ್ಲಿಕೇಶನ್ ಮಾಡಿದ ಉದ್ದೇಶ ಬೆಳೆ ಸಮೀಕ್ಷೆಯನ್ನು (Crop survey)ನೋಡಲು.. ಇದರಲ್ಲಿ ನೀವು ಅಪ್ಲೋಡ್ ಮಾಡಿದ ಚಿತ್ರಗಳನ್ನು ಮತ್ತು ಸಮೀಕ್ಷೆ ಮಾಡಿದ ಸರ್ವೇಯರ್ ವಿವರಗಳನ್ನು ನೋಡಬಹುದು.
ತಮ್ಮ ಮೊಬೈಲ್ ಮೂಲಕ ಬೆಳೆಗಳ ಸಮೀಕ್ಷೆ(Bele samikshe) ಮಾಡಬಹುದು. ಅಥವಾ ನೆರೆಯ ಖಾಸಗಿ ವ್ಯಕ್ತಿಗಳ (Private resident) ಮೊಬೈಲ್ ಮೂಲಕ ಜಮೀನುಗಳ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ನಿಮ್ಮ ಜಮೀನಿನ ಸರ್ವೆ ನಂಬರ್(Survey number) ಮತ್ತು ಜಮೀನಿನ ಫೊಟೋ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಮೊಬೈಲ್ ನಲ್ಲಿ Bele darshak app ಮೂಲಕ ಕ್ಷಣಾರ್ಧದಲ್ಲಿ ನೋಡಬಹುದು. ಒಂದು ವೇಳೆ ತಪ್ಪಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು.
ಬೆಳೆ ದರ್ಶಕ್ ಆ್ಯಪ್(bele darshaka app) ಇನ್ಸ್ ಸ್ಟಾಲ್ ಮಾಡಿಕೊಂಡ ನಂತರ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಇನ್ನಿತರ ಮಾಹಿತಿ ನಮೂದಿಸಬೇಕು. ಬೆಳೆ ದರ್ಶಕ್ ಆ್ಯಪ್(Bele darshaka application) ಮೂಲಕ ಜಮೀನಿನಲ್ಲಿ ಬೆಳೆ ಸಮೀಕ್ಷೆ (Bele samikshe)ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ (Crop survey)ಸಮಯದಲ್ಲಿ ತೆಗೆಯಲಾದ ಜಿಪಿಎಸ್ ಆಧಾರಿತ (GPS Photo)ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ಅಲ್ಲದೆ ರೈತರ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ, (Mobile number)ರೈತರು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ನೋಡಬಹುದು.
ಒಂದು ವೇಳೆ ಮಾಹಿತಿ ತಪ್ಪಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು.ಮೇಲ್ವಿಚಾರಕರು ಸೂಕ್ತ ಬೆಳೆಗಳನ್ನು ದಾಖಲಿಸಿ ರೈತರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುತ್ತಾರೆ. ಇನ್ನೇಕೆ ತಡ ಒಮ್ಮೆ ನಿಮ್ಮ ಬೆಳೆ ಸಮೀಕ್ಷೆಯಲ್ಲಿ ಎಲ್ಲಾ ಸರ್ವೆ ನಂಬರ್, ಮಾಹಿತಿ ಹಾಗೂ ಫೋಟೋ ಸರಿಯಾಗಿ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಡಿ
]]>
ರಾಜ್ಯ ರಾಜಧಾನಿ ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ಕೃಷಿ ಸಂಶೋಧನಾ ಪರಿಷತ್ (ICAR) ಮತ್ತು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಗಳು (IIHR) ತೋಟಗಾರಿಕೆ ಮತ್ತು ಸಂಬಂಧಿತ ವಲಯಗಳ ಎಲ್ಲ ಪ್ರಮುಖ ಇಲಾಖೆಗಳ ಸಂಸ್ಥೆಗಳ ಸಹಕಾರದಲ್ಲಿ 'ಭಾರತೀಯ ತೊಟಗಾರಿಕೆ ಮೇಳ 2025' ಅನ್ನು ಹಮ್ಮಿಕೊಂಡಿದೆ.
ಐಐಎಚ್ಆರ್ ಮತ್ತು ಐಸಿಎಆರ್ ವತಿಯಿಂದ ಮುಂದಿನ ತಿಂಗಳು ಫೆಬ್ರವರಿ 27ರಿಂದ ಮಾರ್ಚ್ 01ರವರೆಗೆ ಬೃಹತ್ "ರಾಷ್ಟ್ರೀಯ ತೋಟಗಾರಿಕಾ ಮೇಳ - 2025" ಹಮ್ಮಿಕೊಂಡಿದೆ. 'ವಿಕಸಿತ ಭಾರತಕ್ಕಾಗಿ ತೋಟಗಾರಿಕೆ - ಪೋಷಣೆ, ಸಬಲೀಕರಣ ಮತ್ತು ಜೀವನೋಪಾಯ' ಶಿರ್ಷಿಕೆಯಡಿ ಕಾರ್ಯಕ್ರಮವು ಹೆಸರಘಟ್ಟದ ಸಂಸ್ಥೆಯ ವಿಶಾಲ ಪ್ರದೇಶದಲ್ಲಿ ನಡೆಯಲಿದೆ. ಲಕ್ಷಾಂತರ ರೈತರು, ಸಾರ್ವಜನಿಕರು, ತೋಟಗಾರಿಕೆ ಬೆಳಗಾರರು ಆಗಮಿಸಲಿದ್ದಾರೆ ಎಂದು ಐಐಎಚ್ಆರ್ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ತೋಟಗಾರಿಕೆ ಮೇಳದಲ್ಲಿ ಏನೆಲ್ಲ ಇರಲಿದೆ?
ರಾಷ್ಟ್ರೀಯ ತೋಟಗಾರಿಕಾ ಮೇಳದಲ್ಲಿ ಪೌಷ್ಟಿಕಾಂಶದಿಂದ ಸಮೃದ್ಧವಾಗಿರುವ ಬೆಳೆಗಳು ಮತ್ತು ಪ್ರಭೇದಗಳ ಮೂಲಕ ಪೌಷ್ಟಿಕಾಂಶವನ್ನು ಸುಧಾರಿಸುವ ಪ್ರಭೇದಗಳು ಮತ್ತು ತಂತ್ರಜ್ಞಾನಗಳನ್ನು ಪ್ರದರ್ಶನ ಇರಲಿದೆ. ಪೌಷ್ಟಿಕಾಂಶ ಬೆಳೆಗಳ ಉತ್ತೇಜನ ಮೇಲೆ ಮೇಳೆ ಕೇಂದ್ರೀಕರಿಸುತ್ತದೆ. ಅಗತ್ಯವಿರುವ ರೈತರನ್ನು ತೋಟಗಾರಿಕಾ ಬೆಳೆಗಳ ವಿವಿಧ ಅಂಶಗಳ ಕುರಿತು ಅಗತ್ಯ ಆಧಾರಿತ ಮಾಹಿತಿ / ತಂತ್ರಜ್ಞಾನಗಳು ಮತ್ತು ಕಾರ್ಯಕ್ರಮ ಮೂಲಕ ಸಬಲೀಕರಣಗೊಳಿಸುವ ಪ್ರಯತ್ನ ಇದಾಗಿದೆ.
ಆಗಮಿಸುವ ರೈತರಿಗೆ, ಸಣ್ಣ ಬೆಳೆಗಾರರಿಗೆ, ಆರ್ಥಿಕವಾಗಿ ಹಿಂದುಳಿದ ಸಣ್ಣ ರೈತರಿಗೆ ಸೂಕ್ತ ತಂತ್ರಜ್ಞಾನಗಳ ಮೇಲೆ ಮತ್ತು ಸಾಮಾಜಿಕವಾಗಿ, ಆರ್ಥಿಕವಾಗಿ ಹೊಂದಿಕೊಳ್ಳುವ ಮತ್ತು ಪರಿಸರಕ್ಕೆ ಸುರಕ್ಷಿತವಾದ ತೋಟಗಾರಿಕಾ ಬೆಳೆಗಳಲ್ಲಿ ಉತ್ಪಾದಕತೆ ಕುರಿತು ತಿಳಿಸಲಾಗುವುದು. ಆದಾಯ ಹೆಚ್ಚಸಲು ಮತ್ತು ಬೆಳೆಗಾರರ ಜೀವನೋಪಾಯ ಸುಧಾರಣೆ ಮೇಲೆ ಸಂಸ್ಥೆ ಗಮನ ಕೇಂದ್ರೀಕರಿಸಿದೆ.
ಸಂಸ್ಥೆಯು ಬೆಳೆ ಉತ್ಪಾದನೆ, ಬೆಳೆ ರಕ್ಷಣೆ, ಕೊಯ್ಲಿನ ನಂತರದ ನಿರ್ವಹಣೆ, ಮೌಲ್ಯವರ್ಧನೆ, ಯಂತ್ರೋಪಕರಣಗಳು ಮತ್ತು ತೋಟಗಾರಿಕಾ ಬೆಳೆಗಳಲ್ಲಿ IIHR ಮತ್ತು ICAR ಅಭಿವೃದ್ಧಿಪಡಿಸಿದ 250ಕ್ಕೂ ಹೆಚ್ಚು ಪ್ರಭೇದಗಳು ಮತ್ತು ತಂತ್ರಜ್ಞಾನಗಳ ಪ್ರದರ್ಶನ ಮೇಳದಲ್ಲಿ ಇರಲಿದೆ.
ತೋಟಗಾರಿಕೆ ಸಂಸ್ಥೆಯು ಅಭಿವೃದ್ಧಿಪಡಿಸಿದ ಪ್ರಭೇದಗಳು ಫಲ, ಪುಷ್ಪ, ತರಕಾರಿ, ಔಷಧ ಬೆಳೆಗಳ ಮತ್ತು ತಂತ್ರಜ್ಞಾನಗಳ ನೇರ ಪ್ರದರ್ಶನ ನಡೆಯಲಿದೆ. ಮಾರಾಟಕ್ಕೂ ಅವಕಾಶ ಇದೆ. ನಗರ ತೋಟಗಾರಿಕೆಗಾಗಿ ಲಂಬ ಕೃಷಿ ಮತ್ತು ತಾರಸಿ ಕೃಷಿ, ವಿವಿಧ ತೋಟಗಾರಿಕೆ ಬೆಳೆಗಳ ಸಂರಕ್ಷಿತ ಕೃಷಿಯ ಕುರಿತು ಶ್ರೇಷ್ಠತಾ ಕೇಂದ್ರ ಸೌಲಭ್ಯ ಹೊಂದಿರುತ್ತದೆ.
250ಕ್ಕೂ ಹೆಚ್ಚು ಮಳಿಗೆಗಳು
ಅಣಬೆ ಉತ್ಪಾದನೆಯ ಕೌಶಲ್ಯ ಆಧಾರಿತ ಕಾರ್ಯಗಾರಗಳು, ತೋಟಗಾರಿಕೆ ಮತ್ತು ಇತರ ಸಂಬಂಧಿತ ಉದ್ಯಮಗಳಲ್ಲಿ ನವೀನ ತಂತ್ರಜ್ಞಾನಗಳ ಕುರಿತು 250ಕ್ಕೂ ಹೆಚ್ಚು ಮಳಿಗೆಗಳು, ವಿವಿಧ ತೋಟಗಾರಿಕೆ ಬೆಳೆಗಳಲ್ಲಿನ ಕ್ಷೇತ್ರ ಆಧಾರಿತ ಸಮಸ್ಯೆಗಳ ಕುರಿತು ಸಮಾಲೋಚನೆ ಮತ್ತು ಸಲಹೆ ಸೌಲಬ್ಯಗಳು ಹೊಂದಿರಲಿವೆ. ವಿವಿಧ ಫಲ, ಪುಷ್ಪ, ತರಕಾರಿ, ಔಷದ ಬೆಳೆಗಳ ಹೊಸ ಪ್ರಭೇದಗಳ ಮತ್ತು ಮಿಶ್ರತಳಿಗಳ ಬೀಜಗಳು, ಪ್ರಕ್ರಿಯೆ ಉತ್ಪನ್ನಗಳು, ಸಸಿ ಸಾಮಗ್ರಿಗಳು, ಉಪಕರಣಗಳು ಮತ್ತು ಯಂತ್ರೋಪಕರಣಗಳು ಇತ್ಯಾದಿಗಳ ಮಾರಾಟದ ಅವಕಾಶ ಇರಲಿದೆ. ಬೆಳಗಾರರು, ರೈತರು ಇದರ ಸೌಲಭ್ಯ ಪಡೆದುಕೊಳ್ಳಬಹುದು.
ಮಳಿಗೆ ಕಾಯ್ದಿರಿಸಲು ಹೀಗೆ ಮಾಡಿ
ಬೆಂಗಳೂರು ತೋಟಗಾರಿಕೆ ಮೇಳದಲ್ಲಿ ಮಳಿಗೆ ಹಾಕಲು ಬಯಸುವವರು, ಅವುಗಳನ್ನು ಕಾಯ್ದಿರಿಸಲು ಡಾ. ಎಂ. ತಂಗಮ್, ಪ್ರಧಾನ ವಿಜ್ಞಾನಿ ಮತ್ತು ಅಧ್ಯಕ್ಷರು, ಪ್ರದರ್ಶನ ಸಮಿತಿ (ಇ-ಮೇಲ್: [email protected] ) ಅಥವಾ ಮೊಬೈಲ್ ಸಂಖ್ಯೆ 9423057269 ಅಥವಾ ಸೊಸೈಟಿ ಫಾರ್ ಪ್ರಮೋಷನ್ ಆಫ್ ಹಾರ್ಟಿಕಲ್ಚರ್ IIHA ಮತ್ತು ICAR ಬೆಂಗಳೂರು ಇಲ್ಲಿಗೆ ಸಂಪರ್ಕ ಕಲ್ಪಿಸಬೇಕು ಎಂದು ತಿಳಿಸಲಾಗಿದೆ..
]]>ಪ್ರಸಕ್ತ ಸಾಲಿನ ಬೆಳೆ ವಿಮೆ ಸ್ಥಳೀಯ ವಿಕೋಪದಡಿ ಜಿಲ್ಲೆಯ ಒಟ್ಟು 2,03,720 ರೈತರಿಗೆ ₹76.94 ಕೋಟಿ ಪರಿಹಾರ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.
ರೈತರು ಬ್ಯಾಂಕ್ಗಳಿಗೆ ಭೇಟಿ ನೀಡಿ ತಮ್ಮ ಖಾತೆಗೆ ಪರಿಹಾರ ಹಣ ಜಮೆಯಾಗಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.
ರೈತರು ಬ್ಯಾಂಕ್ಗಳಿಗೆ ಭೇಟಿ ನೀಡಿ ತಮ್ಮ ಖಾತೆಗೆ ಪರಿಹಾರ ಹಣ ಜಮೆಯಾಗಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
Crop insurance:2024-25ನೇ ಸಾಲಿನ ಬೆಳೆ ವಿಮೆ ಹಣ ಜಮಾ ಪ್ರಾರಂಭ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ತುಂಬಿನ ಬೆಳೆಹಾನಿ ಆಗಿರುವ ಹಾಗೂ ಅರ್ಜಿ ಸಲ್ಲಿಸಿರುವ ರೈತರಿಗೆ ಸ್ಥಳಿಯ ಗಂಡಾಂತರದಡಿ(localised calamity) ಇನ್ಸುರೆನ್ಸ್ ಕಂಪನಿಯರು ವಿಮಾದಾರರ ಖಾತೆಗೆ ಬೆಳೆ ವಿಮೆ ಹಣ ಬಿಡುಗಡೆ ಮಾಡಿದ್ದಾರೆ.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ 3.0 ಸರ್ಕಾರ ರೈತರಿಗೆ ಯಾವ ಕೊಡುಗೆ ನೀಡಲಿದೆ ಎಂದು ಚರ್ಚೆಗಳು ನಡೆಯುತ್ತಿವೆ. ಹೊಸ ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗುತ್ತಿದೆ. ಬಜೆಟ್ನಲ್ಲಿ ಕೃಷಿ ವಲಯಕ್ಕೆ ಸಿಗುವ ಭರವಸೆಗಳೇನು?, ರೈತರ ಕಲ್ಯಾಣಕ್ಕಾಗಿ ಸರ್ಕಾರ ಯಾವ ಯಾವ ಘೋಷಣೆಗಳನ್ನು ಮಾಡಲಿದೆ?ಎಂದು ಕಾದು ನೋಡಬೇಕಿದೆ.
ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಕೇಂದ್ರ ಬಜೆಟ್ 2025-26 ಮಂಡಿಸಲಿದ್ದಾರೆ. ರೈತರ ಹಿತಾಸಕ್ತಿ ಕಾಪಾಡಲು ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿರುವ ಸರ್ಕಾರ, ಬಜೆಟ್ನಲ್ಲಿಯೂ ಹೊಸ ಘೋಷಣೆ ಮಾಡಲಿದೆ ಎಂದು ಅಂದಾಜಿಸಲಾಗಿದೆ.
ಪ್ರಮುಖವಾಗಿ ಬಜೆಟ್ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಕಿಸಾನ್ ಕ್ರೆಡಿಟ್ ಕಾರ್ಡ್ಗಳ ಮಿತಿಯನ್ನು ಹೆಚ್ಚಿಸಲಿದ್ದಾರೆ. ಜಿಎಸ್ಟಿ ಕಡಿಮೆ ಮಾಡಲಿದ್ದಾರೆ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚುವರಿ ಅನುದಾನವನ್ನು ನೀಡುವ ನಿರೀಕ್ಷೆ ಇದೆ.
PM Kisan Samman: ಪಿಎಂ ಕಿಸಾನ್ ಸಮ್ಮಾನ್ ನಿಧಿ ಹಣ 12,000ಕ್ಕೆ ಏರಿಕೆ
ರೈತರ ಕಲ್ಯಾಣಕ್ಕೆ ಆದ್ಯತೆ: ರೈತರ ಆದಾಯವನ್ನು ಹೆಚ್ಚಿಸಬೇಕು, ಅವರ ಕಲ್ಯಾಣಕ್ಕೆ ಆದ್ಯತೆ ನೀಡಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಗುರಿಯಾಗಿದೆ. ಆದ್ದರಿಂದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.
ಸರ್ಕಾರ 2025-26ನೇ ಸಾಲಿನ ಬಜೆಟ್ನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3 ರಿಂದ 5 ಲಕ್ಷಕ್ಕೆ ಏರಿಕೆ ಮಾಡುವ ನಿರೀಕ್ಷೆ ಇದೆ. ಇದರಿಂದಾಗಿ ರೈತರು ಕೃಷಿ ಕ್ಷೇತ್ರದ ಮೇಲೆ ಹೆಚ್ಚಿನ ಹೂಡಿಕೆ ಮಾಡಲು ಅನುಕೂಲವಾಗಲಿದೆ.
ರೈತರಿಗೆ ಅನುಕೂಲ ಮಾಡಿಕೊಡಲು ಬಜೆಟ್ನಲ್ಲಿ ಬಿತ್ತನೆ ಬೀಜ, ರಸಗೊಬ್ಬರದ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಕಡಿಮೆ ಮಾಡುವ ನಿರೀಕ್ಷೆ ಇದೆ. ಜಿಎಸ್ಟಿ ಕಡಿಮೆ ಮಾಡಿದರೆ ದರಗಳು ಕಡಿಮೆಯಾಗಲಿದ್ದು, ರೈತರ ಹಣವೂ ಉಳಿತಾಯವಾಗಲಿದೆ.
ಹಿಂದಿನ ಬಜೆಟ್ನಲ್ಲಿ ಕೃಷಿ ಕ್ಷೇತ್ರ, ಕೃಷಿ ಸಂಬಂಧಿತ ಯೋಜನೆಗಳಿಗೆ ಸರ್ಕಾರ 65,529 ಕೋಟಿ ರೂ. ಅನುದಾನ ಮೀಸಲಿಟ್ಟಿತ್ತು. ಈ ಬಾರಿ ಬಜೆಟ್ನಲ್ಲಿ ಇದನ್ನು ಶೇ 5 ರಿಂದ 7ರಷ್ಟು ಹೆಚ್ಚಳ ಮಾಡುವ ನಿರೀಕ್ಷೆ ಇದ್ದು, ಇದರಿಂದಾಗಿ ಹೆಚ್ಚಿನ ಅನುದಾನ ಲಭ್ಯವಾಗಲಿದೆ.
ಕೇಂದ್ರ ಸರ್ಕಾರ ರೈತರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಪ್ರಮುಖ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ. ಈ ಯೋಜನೆಯಡಿ ರೈತರಿಗೆ ನೀಡುವ ಹಣಕಾಸಿನ ಬೆಂಬಲವನ್ನು ಹೆಚ್ಚಳ ಮಾಡುವ ನಿರೀಕ್ಷೆ ಇದೆ.
ಯೋಜನೆಯಡಿ ಕೃಷಿಯೋಗ್ಯ ಭೂಮಿ ಹೊಂದಿರುವ ರೈತ ಕುಟುಂಬಗಳಿಗೆ ಹಣಕಾಸಿನ ನೆರವು ನೀಡಲಾಗುತ್ತದೆ. ಸದ್ಯ ಯೋಜನೆಯಡಿ ರೂ. 6000 ಅನ್ನು ವಾರ್ಷಿಕವಾಗಿ ಮೂರು ಸಮಾನ ಕಂತುಗಳಲ್ಲಿ ರೂ. 2000 ದಂತೆ ನೇರವಾಗಿ ರೈತರ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತಿದೆ. ಇದನ್ನು 12,000 ರೂ.ಗಳಿಗೆ ಏರಿಕೆ ಮಾಡಲಾಗುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ.
2024ರ ಆಗಸ್ಟ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 'ಕೃಷಿ ಮೂಲಸೌಕರ್ಯ ನಿಧಿ' ಅಡಿಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿತ್ತು. ದೇಶದಲ್ಲಿ ಕೃಷಿ ಮೂಲಸೌಕರ್ಯವನ್ನು ಹೆಚ್ಚಿಸಲು ಮತ್ತು ಬಲಪಡಿಸಲು ಮತ್ತು ರೈತ ಸಮುದಾಯವನ್ನು ಬೆಂಬಲಿಸಲು ಕೃಷಿ ಮೂಲಸೌಕರ್ಯ ನಿಧಿ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಲು ಸರ್ಕಾರವು ಹಲವು ಕ್ರಮಗಳನ್ನು ಘೋಷಿಸಿತ್ತು.
]]>ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ದೆಹಲಿ ಚುನಾವಣೆಗೂ ಮೊದಲು ಜನೇವರಿ ಕೊನೆಯ ವಾರ ಅಥವಾ ಫೆಬ್ರುವರಿ ಮೊದಲ ವಾರ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>ಪ್ರವಾಸೊದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ ತರಬೇತಿ ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು.
ಯೋಜನೆಯ ಘಟಕ ವೆಚ್ಚ
ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಇಲಾಖೆಯ ಸಹಾಯಧನ ಘಟಕ ವೆಚ್ಚದಲ್ಲಿ ಶೇ.70 ರಷ್ಟು ಗರಿಷ್ಠ ರೂ.5 ಲಕ್ಷ ಮಾತ್ರ. ಫಲಾನುಭವಿಯ ವಂತಿಗೆ ವಾಹನದ ಒಟ್ಟು ವೆಚ್ಚದ ಶೇ.5 ರಷ್ಟು. ಹಣಕಾಸು ಸಂಸ್ಥೆಗಳು, ಬ್ಯಾಂಕ್ ಸಾಲ - ವಾಹನದ ಒಟ್ಟು ವೆಚ್ಚದಲ್ಲಿ ಉಳಿದ ಮೊತ್ತ.
ಅರ್ಹತೆ
ಅರ್ಜಿದಾರರು ಬಳ್ಳಾರಿ ಜಿಲ್ಲೆಯ ನಿವಾಸಿಯಾಗಿರಬೇಕು. ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ವಯಸ್ಸು 20 ರಿಂದ 45 ವರ್ಷದೊಳಗಿರಬೇಕು. ಅಭ್ಯರ್ಥಿಗಳು ಲಘು ವಾಹನ ಚಾಲನಾ ಪರವಾನಗಿ ಪಡೆದಿರಬೇಕು. ನಗರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ.2 ಲಕ್ಷ ಮೀರಬಾರದು. ಗ್ರಾಮಾಂತರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ.1.50 ಲಕ್ಷ ಮೀರಬಾರದು. ಯಾವುದೇ ಸರ್ಕಾರಿ ಇಲಾಖೆಯಲ್ಲಿ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು.
ಬೇಕಾದ ದಾಖಲೆಗಳು:
ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಇತ್ತೀಚಿನ ಭಾವಚಿತ್ರದೊಂದಿಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಆಧಾರ್ಕಾರ್ಡ್ ಪ್ರತಿ ಕಡ್ಡಾಯವಾಗಿ ಸಲ್ಲಿಸಬೇಕು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರುವ ಬಗ್ಗೆ ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿ ಸಲ್ಲಿಸಬೇಕು. ಖಾಯಂ ಲಘುವಾಹನ ಚಾಲನಾ ಪರವಾನಗಿ ಪತ್ರದ ಪ್ರತಿ ಸಲ್ಲಿಸಬೇಕು.
ವಿದ್ಯಾರ್ಹತೆಯ ಬಗ್ಗೆ ಕನಿಷ್ಠ ಎಸ್ಎಸ್ಎಲ್ಸಿ ಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಪ್ರತಿ ಸಲ್ಲಿಸಬೇಕು. ಅರ್ಜಿದಾರನು ಯಾವುದೇ ಸರ್ಕಾರಿ ಇಲಾಖೆ, ನಿಗಮ, ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರದ ಬಗ್ಗೆ ಸ್ವಯಂ ಪ್ರಮಾಣೀಕರಿಸಿ, ರೂ.50/-ರ ಬೆಲೆಯ ಛಾಪಾಕಾಗದ (ಅಫಿಡೇವಿಟ್)ದಲ್ಲಿ ನಮೂನೆ-3ರಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು. ಮೇಲಿನ ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸಬೇಕು.
ಅರ್ಜಿಗಳನ್ನು ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಕಚೇರಿಯಲ್ಲಿ ಪಡೆದುಕೊಂಡು ಭರ್ತಿ ಮಾಡಿ ಇದೇ ಕಚೇರಿಗೆ ಜ.31 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08394-295640 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಬರುತ್ತಿರುವ ಎರಡು ಸಾವಿರ ರೂಪಾಯಿ 16 ನೇ ಕಂತಿನ ಹಣ ಜನವರಿ 14 ರಿಂದ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ನೆರೆಯ ತೆಲಂಗಾಣದಲ್ಲಿ ₹2 ಲಕ್ಷದವರೆಗೆ
ರೈತರ ಸಾಲ ಮನ್ನಾ ಮಾಡಲು ಅಲ್ಲಿನ ಸರ್ಕಾರ ನಿರ್ಧಾರ
ಮಾಡಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರೈತರ ಸಾಲ ಮನ್ನಾ
ಮಾಡಿ ರೈತರನ್ನು ಋಣಮುಕ್ತರನ್ನಾಗಿಸಿ' ಎಂದು ವಿಧಾನಸಭೆ
ವಿರೋಧಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದ್ದಾರೆ
Belesala manna status 2024-ಬೆಳೆಸಾಲ ಮನ್ನಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ
ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ/farmer" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
]]>
ಕೇಂದ್ರ ವಲಯದ ಯೋಜನೆ ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಸರ್ಕಾರವು ಹಣಕಾಸು ಸೌಲಭ್ಯಗಳನ್ನು ಒದಗಿಸುತ್ತಿದ್ದು, ರೂ. 2 ಕೋಟಿ ಸಾಲದ ಮೊತ್ತಕ್ಕೆ ವಾರ್ಷಿಕ ಶೇ. 3ರಂತೆ 7 ವರ್ಷದ ಅವಧಿಗೆ ಬಡ್ಡಿ ಸಹಾಯಧನ ಲಭ್ಯವಿರುತ್ತದೆ.
ಅರ್ಹ ಕೃಷಿ ಚಟುವಟಿಕೆಗಳು/ಯೋಜನೆಗಳು ಈ ಕೆಳಗಿನಂತಿವೆ
ಇ-ಮಾರುಕಟ್ಟೆ ವೇದಿಕೆ ಸೇರಿದಂತೆ ಸರಬರಾಜು ಸರಪಳಿ ಸೇವೆಗಳು ಗೋದಾಮುಗಳು ಮತ್ತು ಸೈಲೊಗಳು + ಪ್ಯಾಕ್ ಹೌಸ್ಗಳು ವಿಂಗಡಣೆ ಮತ್ತು ಶ್ರೇಣೀಕರಣ ಘಟಕಗಳು ಶೀತಲಗೃಹ ಸರಪಳಿಗಳು ಸಾಗಾಣಿಕೆ ಸೌಲಭ್ಯಗಳು ಪ್ರಾಥಮಿಕ ಸಂಸ್ಕರಣಾ ಕೇಂದ್ರಗಳು ಹಣ್ಣು ಮಾಗಿಸುವ ಘಟಕಗಳು
ಮೌಲ್ಯಮಾಪನ ಘಟಕಗಳು ಸಂಕುಚಿತ ಜೈವಿಕ ಅನಿಲ (CBG) ಸ್ಥಾವರ + ಸಾವಯವ ಪರಿಕರ ಉತ್ಪಾದನೆ + ಜೈವಿಕ ಉತ್ತೇಜಕ ಉತ್ಪಾದನಾ ಘಟಕಗಳು * ಸಸ್ಯ ನರ್ಸರಿ /ಅಂಗಾಂಶ ಕೃಷಿ ಬೀಜ ಸಂಸ್ಕರಣೆ + ಕೃಷಿ ಯಂತ್ರಧಾರೆ ಕೇಂದ್ರಗಳು ಸ್ಮಾರ್ಟ್ ಮತ್ತು ನಿಖರವಾದ ಕೃಷಿ ಸಂಯೋಜಿತ ಸ್ಪಿರುಲಿನಾ ಉತ್ಪಾದನೆ ಮತ್ತು ಸಂಸ್ಕರಣಾ ಘಟಕಗಳು ರೇಷ್ಮೆ ಕೃಷಿ ಸಂಸ್ಕರಣಾ ಘಟಕ • ಜೇನು ಸಂಸ್ಕರಣಾ ಘಟಕ ಪ್ಲಾಂಟ್ ಕ್ಯಾರಂಟೈನ್ ಘಟಕಗಳು ಮತ್ತು ಸಾಮೂಹಿಕ ಕೃಷಿ ಅಡಿ: ಜಲಕೃಷಿ, ವಾಯುಕೃಷಿ, ಹಸಿರುಮನೆ, ಬಹುಮಹಡಿ ಕೃಷಿ, ಅಣಬೆ ಬೇಸಾಯ
ಅರ್ಹ ಫಲಾನುಭವಿಗಳು
ರೈತರು/ ರೈತ ಉತ್ಪಾದಕ ಸಂಸ್ಥೆಗಳು, ಪ್ರಾಂತೀಯ ಸಹಕಾರ ಒಕ್ಕೂಟಗಳು ಕೃಷಿ ಉದ್ಯಮಿಗಳು / ನವೋದ್ಯಮಿಗಳು ಪ್ರಾಥಮಿಕ ಕೃಷಿ ಕ್ರೆಡಿಟ್ ಸಹಕಾರ ಸಂಘಗಳು + ವಿವಿಧೋದ್ದೇಶ ಸಹಕಾರ ಸಂಘಗಳು * ಸ್ವ-ಸಹಾಯ ಗುಂಪುಗಳು / ಜಂಟಿ ಬಾಧ್ಯತಾ ಗುಂಪುಗಳು / ಖಾಸಗಿ ಮಾಲೀಕತ್ವ ಸಂಸ್ಥೆಗಳು.
ಯೋಜನೆಯಲ್ಲಿ ಭಾಗವಹಿಸುವ ಹಣಕಾಸು ಸಂಸ್ಥೆಗಳು:
ರಾಷ್ಟ್ರೀಕೃತ ಬ್ಯಾಂಕುಗಳು + ಶೆಡ್ಯೂಲ್ಡ್ ಸಹಕಾರಿ ಬ್ಯಾಂಕ್ ಗಳು + ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು ಸಣ್ಣ ಹಣಕಾಸು ಬ್ಯಾಂಕುಗಳು + ಬ್ಯಾಂಕೇತರ ಹಣಕಾಸು ಸಂಸ್ಥೆಗಳು + ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (ಎನ್ ಸಿಡಿಸಿ).
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
CPMU, ಕೃಷಿ ಮತ್ತು ರೈ ಕಲ್ಯಾಣ ಮಂತ್ರಾಲಯದ ಮೂಲಕ ಪರಿಶೀಲಿಸಲಾದ ಅರ್ಜಿಯನ್ನು ಬ್ಯಾಂಕ್ ಶಾಖೆಗೆ ಆನ್ ಲೈನ್ ನಲ್ಲಿ ವರ್ಗಾಯಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕೃಷಿ/ತೋಟಗಾರಿಕೆ ಇಲಾಖೆ, ಜಿಲ್ಲಾ ನಬಾರ್ಡ್ ವ್ಯವಸ್ಥಾಪಕರು, ನಿಮ್ಮ ವ್ಯಾಪ್ತಿಯ ಬ್ಯಾಂಕ್/ ಹಣಕಾಸು ಸಂಸ್ಥೆಗಳನ್ನು ಸಂಪರ್ಕಿಸಬಹುದು.
]]>ಪ್ರಸಕ್ತ ಸಾಲಿನ ಬೆಳೆ ವಿಮೆ ಸ್ಥಳೀಯ ವಿಕೋಪದಡಿ ಜಿಲ್ಲೆಯ ಒಟ್ಟು 2,03,720 ರೈತರಿಗೆ ₹76.94 ಕೋಟಿ ಪರಿಹಾರ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.
ರೈತರು ಬ್ಯಾಂಕ್ಗಳಿಗೆ ಭೇಟಿ ನೀಡಿ ತಮ್ಮ ಖಾತೆಗೆ ಪರಿಹಾರ ಹಣ ಜಮೆಯಾಗಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.
ರೈತರು ಬ್ಯಾಂಕ್ಗಳಿಗೆ ಭೇಟಿ ನೀಡಿ ತಮ್ಮ ಖಾತೆಗೆ ಪರಿಹಾರ ಹಣ ಜಮೆಯಾಗಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
Crop insurance:2024-25ನೇ ಸಾಲಿನ ಬೆಳೆ ವಿಮೆ ಹಣ ಜಮಾ ಪ್ರಾರಂಭ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ತುಂಬಿನ ಬೆಳೆಹಾನಿ ಆಗಿರುವ ಹಾಗೂ ಅರ್ಜಿ ಸಲ್ಲಿಸಿರುವ ರೈತರಿಗೆ ಸ್ಥಳಿಯ ಗಂಡಾಂತರದಡಿ(localised calamity) ಇನ್ಸುರೆನ್ಸ್ ಕಂಪನಿಯರು ವಿಮಾದಾರರ ಖಾತೆಗೆ ಬೆಳೆ ವಿಮೆ ಹಣ ಬಿಡುಗಡೆ ಮಾಡಿದ್ದಾರೆ.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.
ಏನಿದು ಫ್ರೂಟ್ಸ್ ನಂಬರ್
ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.
ನಿಮ್ಮ FID ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.
ಏಕೆ ನೋಂದಾಯಿಸಬೇಕು?
ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್ ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ
ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.
ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.
ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು
]]>
ರಾಜ್ಯದಲ್ಲಿ ಸಾವಯವ ಹಾಗೂ ಸಿರಿಧಾನ್ಯಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಆಶಯದೊಂದಿಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಜ.23ರಿಂದ 25ರವರೆಗೆ 'ಅಂತಾರಾಷ್ಟ್ರೀಯ ವಾಣಿಜ್ಯ ಮೇಳಸಾವಯವ ಮತ್ತು ಸಿರಿಧಾನ್ಯ 2025' ಆಯೋಜಿಸಲಾಗಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ 23 ರಿಂದ 25ರ ವರೆಗೆ ʼಸಾವಯವ ಮತ್ತು ಸಿರಿಧಾನ್ಯ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2025’ ಅನ್ನು ಹಮ್ಮಿಕೊಳ್ಳಲಾಗಿದೆ. ಮೂರು ದಿನ ನಡೆಯುವ ಈ ಮೇಳದಲ್ಲಿ 300ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುವುದು. 30ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ತಜ್ಞರು ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.
ಜ.23ರಿಂದ 3ದಿನ ಸಾವಯವ ಮತ್ತು ಸಿರಿಧಾನ್ಯಗಳ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ನಡೆಯಲಿದೆ. ಕಳೆದ ವರ್ಷ ರಾಜ್ಯದಲ್ಲಿ ನಡೆದ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳಕ್ಕೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ. ದೇಶದ ಅನೇಕ ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಬೆಂಗಳೂರಿನ ಪ್ಯಾಲೆಸ್ ಗೌಂಡ್ನ ತ್ರಿಪುರವಾಸಿನಿ ಆವರಣದಲ್ಲಿ ಸಾವಯವ ಮತ್ತು ಸಿರಿಧಾನ್ಯಗಳ ಅಂತರಾಷ್ಟ್ರೀಯ ವಾಣಿಜ್ಯ ಮೇಳವನ್ನು ಆಯೋಜಿಸಲಾಗುತ್ತಿದೆ. ಸದರಿ ಕಾರ್ಯಕ್ರಮಕ್ಕೆ ಹೊರ ರಾಜ್ಯಗಳಲ್ಲಿ ನಡೆಯುವ ಮೇಳಗಳಲಿ ವಾಣಿಜ್ಯ ಆಸಕ್ತರನ್ನು ಆಹ್ವಾನಿಸಲಾಗಿದೆ” ಎಂದು ತಿಳಿಸಿದರು.
*Quick Links for Various Registrations & Bookings for MOITF 2025*
1. *Millet Run 2025:* https://organics-millets.in/reg-itf-2025/smartrun.php
2. *Exhibition Stall Booking*: https://organics-millets.in/reg-itf-2025/Exhibitionform.php
3. *International Conference* : https://organics-millets.in/reg-itf-2025/Conferenceform.php
4. *Paid Food Stall* : https://organics-millets.in/reg-itf-2025/paidFoodStalls.php
5. *Farmer Workshop* : https://organics-millets.in/reg-itf-2025/farmerWorkshop.php
6. *Public Registration* : https://organics-millets.in/reg-itf-2025/public.php
]]>
https://ahara.kar.nic.in/Home/EServices
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ e-Ration Card ಮೇಲೆ ಕ್ಲಿಕ್ ಮಾಡಿ
ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ ಮೇಲೆ ಕ್ಲಿಕ್ ಮಾಡಿ,Go ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ರದ್ದಾದ ರೇಷನ್ ಕಾರ್ಡ್ ಪಟ್ಟಿ ದೊರೆಯಲಿದೆ
ಸ್ವಂತ ಕಾರು ಇರುವವರಿಗೆ 'BPL' ಕಾರ್ಡ್ ಇಲ್ಲ ಎಂದು ಆಹಾರ ಸಚಿವ K.H ಮುನಿಯಪ್ಪಮಹತ್ವದ ಘೋಷಣೆ ಮಾಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವರು ಸ್ವಂತ ಕಾರು ಇರುವವರಿಗೆ 'BPL' ಕಾರ್ಡ್ ಇಲ್ಲ, ಸ್ವಂತ ಕಾರು ಇರುವವರಿಗೆ 'BPL' ಕಾರ್ಡ್ ನೀಡದಿರಲು ಚಿಂತನೆ ನಡೆಸಲಾಗಿದೆ ಎಂದು K.H ಮುನಿಯಪ್ಪಮಹತ್ವದ ಘೋಷಣೆ ಮಾಡಿದ್ದಾರೆ.
ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ, ಯೆಲ್ಲೋ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದನ್ನು ವಾಪಸ್ಸು ಪಡೆಯಲು ಚಿಂತನೆ ನಡೆಸಲಾಗುತ್ತಿದೆ ಎಂದರು.ಅದೇ ರೀತಿ ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ K.H ಮುನಿಯಪ್ಪ ಹೇಳಿದರು. ನೀತಿ ಸಂಹಿತಿ ಜಾರಿ ಹಿನ್ನೆಲೆ ರೇಷನ್ ಕಾರ್ಡ್ ವಿತರಣೆ ಸ್ಥಗಿತವಾಗಿತ್ತು. ಈಗ ಹೊಸ ಪಡಿತರ ಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಜೊತೆಗೆ ಪಡಿತರಕಾರ್ಡ್ ಗೆ ಕೂಡಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ ಎಂದರು.
ಪಡಿತರದಾರರಿಗೆ ಸೆಪ್ಟೆಂಬರ್ ತಿಂಗಳಿನಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಆಂಧ್ರ ಹಾಗೂ ತೆಲಂಗಾಣ ಅಕ್ಕಿ ನೀಡಲು ಮುಂದಾಗಿದೆ, ಒಂದು ವಾರದಲ್ಲಿ ಅಲ್ಲಿನ ಅಧಿಕಾರಿಗಳು ಅಕ್ಕಿ ನೀಡುವ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ . ಆಹಾರ ನಿಗಮದ ದರದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡಿದ್ದೇವೆ, ಕೆಜಿಗೆ 34 ರೂ ದರದಲ್ಲಿ ಅಕ್ಕಿ ನೀಡುವಂತೆ ಕೇಳಿದ್ದೇವೆ. ಸದ್ಯ, 5 ಕೆಜಿ ಅಕ್ಕಿ ಬದಲಾಗಿ ಜನರಿಗೆ ಹಣ ಹಾಕುತ್ತಿದ್ದೇವೆ, ಸೆಪ್ಟೆಂಬರ್ ತಿಂಗಳಿನಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.5 ಕೆಜಿ ಅಕ್ಕಿ ಬದಲು ಇದುವರೆಗೆ 1 ಕೋಟಿ ಕುಟುಂಬಕ್ಕೆ 556 ಕೋಟಿ ಹಣ ಜಮಾ ಮಾಡಲಾಗಿದೆ ಎಂದರು.
Annabhagya amount-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಅಗಸ್ಟ 10 ರಂದು ಅನ್ನಭಾಗ್ಯ ಅಕ್ಕಿ ಮತ್ತು ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
5 ಸದಸ್ಯರಿರುವ ಕುಟುಂಬಕ್ಕೆ 850 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ರಾಜ್ಯದ ಜನತೆಗೆ ಸಂತಸದ ಸುದ್ದಿ. 2025-26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಸಹಕಾರ ಇಲಾಖೆ ಜ.31ರವರೆಗೆ ಅವಕಾಶ ಕಲ್ಪಿಸಿದೆ.
ಗ್ರಾಮೀಣ ಪ್ರದೇಶದ ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ ಆ ಕುಟುಂಬ 500 ರೂಗಳ ವಂತಿಗೆ ಭರಿಸಬೇಕು. ನಾಲ್ಕಕ್ಕಿಂತ ಹೆಚ್ಚು ಸದಸ್ಯರಿದ್ದರೆ ತಲಾ 100 ರೂಗಳ ಹೆಚ್ಚುವರಿ ವಂತಿಗೆ ನೀಡಬೇಕು. ನಗರ ಪ್ರದೇಶದ ಒಂದು ಕುಟುಂಬದಲ್ಲಿ ನಾಲ್ಕು ಜನರಿದ್ದರೆ 1,000 ರೂಗಳು ಹಾಗೂ ಅದಕ್ಕಿಂತ ಹೆಚ್ಚು ಜನರಿದ್ದರೆ ತಲಾ 200 ರೂಗಳು ನಿಗದಿ ಮಾಡಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರಿಗೆ ಉಚಿತ ಸದಸ್ಯತ್ವ
ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರು ಉಚಿತವಾಗಿ ಸದಸ್ಯತ್ವ ಪಡೆಯಬಹುದು. ಈ ಯೋಜನೆ ಅಡಿ 1650 ವಿವಿಧ ಚಿಕಿತ್ಸೆಗಳು, 478 ಐಸಿಯು ಚಿಕಿತ್ಸೆಗಳು ಸೇರಿ ಒಟ್ಟು 2,128 ಚಿಕಿತ್ಸೆಗಳಿಗೆ ನಗದುರಹಿತ ಸೌಲಭ್ಯ ದೊರಕಲಿದೆ.
Yashsvini yojane-ಯಶಸ್ವಿನಿ ಯೋಜನೆಯಡಿ ಉಚಿತವಾಗಿ ಸಿಗಲಿವೆ ಈ ಸೌಲಭ್ಯಗಳು
2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಹೊಸ ಸದಸ್ಯರ ನೋಂದಣಿಗೆ ಅವಕಾಶ ನೀಡಲಾಗಿದೆ.
ದಿನಾಂಕ 1/1/2024 ರಿಂದ ಯಶಸ್ವಿನಿ ನೊಂದಣೆ ಆರಂಭಗೊಂಡಿದ್ದು ದಿನಾಂಕ 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ.
ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತರ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ. 100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.
ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬAಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.
ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ನೆಟ್ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್ಡಿ ನಂಬರ್ ತರುವುದು ಕಡ್ಡಾಯವಾಗಿದೆ.
ಈ ಕೆಳಕಂಡ ಸೌಲಭ್ಯಗಳನ್ನು ಯಶಸ್ಮಿನಿ ಸದಸ್ಯರಿಗೆ ಒದಗಿಸಲಾಗುವುದು.
ಎ) ಪ್ರಸ್ತುತ ಯಶಸ್ಸಿನಿ ಯೋಜನೆಯಡಿಯಲ್ಲಿ ಟ್ರಸ್ಟ್ ಗುರ್ತಿಸಿದ 1650 ವಿವಿಧ ಚಿಕಿತ್ಸೆಗಳು ಮತ್ತು 478 ICU ಚಿಕಿತ್ಸೆಗಳೂ ಸೇರಿದಂತೆ ಒಟ್ಟು 2128 ಚಿಕಿತ್ಸೆಗಳನ್ನು ಅಳವಡಿಸಿಕೊಳ್ಳಲಾಗಿದೆ.
ಬಿ) ರೋಗಿಗಳಿಗೆ ಸದರಿ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದಲ್ಲಿ ನೋಂದಾಯಿಸಿದ ಯಶಸ್ಸಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಒದಗಿಸಲಾಗುವುದು. ನೆಟ್ವರ್ಕ್ ಆಸ್ಪತ್ರೆಗಳನ್ನು ಹೊರತುವಡಿಸಿ ಇತರೆ ಆಸ್ಪತ್ರೆಗಳಲ್ಲಿ ಯಶಸ್ವಿನಿ ಯೋಜನೆಯ ಸೇವೆ ಲಭ್ಯವಿರುವುದಿಲ್ಲ. ಯಶಸ್ಸಿನಿ ಯೋಜನೆಯಡಿ ಫಲಾನುಭವಿ ಚಿಕಿತ್ಸೆ ಪಡೆಯುವ ಮೊದಲು ಆಸ್ಪತ್ರೆಯು ಯೋಜನೆಗೆ ಒಳಪಟ್ಟಿರುವ ಬಗ್ಗೆ, ಖಾತ್ರಿ ಪಡಿಸಿಕೊಂಡು ನಂತರ ಚಿಕಿತ್ಸೆ ಪಡೆಯತಕ್ಕದ್ದು.
ಸಿ) ಯೋಜನೆಯಲ್ಲಿ ಒಳವಡದ ಚಿಕಿತ್ಸೆಗಳ ಮತ್ತು ಟ್ರಸ್ಟ್ ಅಂಗೀಕರಿಸದ ಆಸ್ಪತ್ರೆಗಳಲ್ಲಿ ಪಡೆದಂತಹ ಚಿಕಿತ್ಸೆಗಳಿಗೆ ಯಶಸ್ವಿನಿ ಟ್ರಸ್ಟ್ ಜವಾಬ್ದಾರರಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಆಸ್ಪತ್ರೆಗಳಿಗಾಗಲಿ ಅಥವಾ ಫಲಾನುಭವಿಗಳಿಗಾಗಲಿ ಚಿಕಿತ್ಸಾ ವೆಚ್ಚವನ್ನು ಪಾವತಿಸಲಾಗುವುದಿಲ್ಲ.
ಡಿ) ಎರಡು ಜೀವಂತ ಮಕ್ಕಳು ಅಥವಾ ಎರಡು ಹೆರಿಗೆಗೆ ಮಾತ್ರ ಯಶಸ್ವಿನಿ ಯೋಜನೆಯಲ್ಲಿ ಸೌಲಭ್ಯ ದೊರೆಯುತ್ತದೆ.
ಇ) ಯಶಸ್ವಿನಿ ಯೋಜನೆಯ ಪ್ರೋಟೋಕಾಲ್ ಪ್ರಕಾರ ಯಶಸ್ವಿನಿ ಫಲಾನುಭವಿಗಳು ಜನರಲ್ ವಾರ್ಡನಲ್ಲಿ ಮಾತ್ರ ಚಿಕಿತ್ಸೆ ವಡೆಯಲು ಅರ್ಹರಿರುತ್ತಾರೆ. ಒಂದು ವೇಳೆ ಯೋಜನೆಯಡಿ ನಿಗದಿಪಡಿಸಿರುವ ಜನರಲ್ ವಾರ್ಡ್ ಬದಲಾಗಿ ಉನ್ನತ(Semi Special Ward Or Special Ward)ನಲ್ಲಿ ಚಿಕಿತ್ಸೆ ಪಡೆಯಲು ಇಚ್ಚಿಸಿದಲ್ಲಿ ಸದರಿ ಫಲಾನುಭವಿಗಳಿಗೆ ಯೋಜನೆಯಡಿ ನಿಗದಿ ಪಡಿಸಿರುವಂತೆ ಜನರಲ್ ವಾರ್ಡಗೆ ಅನ್ವಯಿಸುವ ಚಿಕಿತ್ಸೆಯ ವೆಚ್ಚವನ್ನು ಮಾತ್ರ ಭರಿಸಲಾಗುವುದು. ಉನ್ನತ ವಾರ್ಡ್/ಸ್ಪೆಷಲ್ ವಾರ್ಡಿಗೆ ಆಗುವ ಹೆಚ್ಚುವರಿ ವ್ಯತ್ಯಾಸದ ಚಿಕಿತ್ಸಾ ಮೊತ್ತವನ್ನುಸದರಿ ಫಲಾನುಭವಿಗಳೇ ಭರಿಸತಕ್ಕದ್ದು.
ಎಫ್) ಯಶಸ್ವಿನಿ ಯೋಜನೆಯ ವ್ಯಾಕೇಜಿನಲ್ಲಿ Implants ಅಗತ್ಯವಿರುವ ಕಡೆ Implants ơ. (Ex. Knee replacement, Lens in cataract Surgery) ವೇಳೆ ಫಲಾನುಭವಿಗಳು ಉನ್ನತ Implants ಅಥವಾ Lens ನಡೆಯಲು ಸ್ವ ಇಚ್ಛೆಯಿಂದ ಒಪ್ಪಿಗೆ ಸೂಚಿಸಿದ್ದಲ್ಲಿ, ಅಂತಹ ಉನ್ನತ Implants ಮತ್ತು Lens ಗೆ ತಗಲುವ ವ್ಯತ್ಯಾಸದ ಹೆಚ್ಚುವರಿ ಮೊತ್ತವನ್ನು ಅಂತ ಫಲಾನುಭವಿಗಳೇ ಭರಿಸಿ ಚಿಕಿತ್ಸೆಯನ್ನು ವಡೆಯತಕ್ಕದ್ದು.
ಜಿ) ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಯಶಸ್ಸಿನಿ ಸದಸ್ಯರಿಗೆ ಹೊರ ರೋಗಿ ಚಿಕಿತ್ಸೆಗೆ (OPD) ಗರಿಷ್ಠ ರೂ.200/-ಗಳನ್ನು (ಮೂರು ತಿಂಗಳ ಅವಧಿಗೆ) ಮಿತಿ ನಿಗಧಿಪಡಿಸಿದ್ದು, ಈ ಪೈಕಿ ರೂ.100/- ಗಳನ್ನು ಯಶಸ್ವಿನಿ ಟ್ರಸ್ಟ್ ವತಿಯಿಂದ ವಾವತಿಸಲಾಗುವುದು.
17. ಸದಸ್ಯರ ನೋಂದಣಿಗೆ ಮಾರ್ಗಸೂಚಿಗಳು, ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳ ಯಾದಿ, ಶಸ್ತ್ರಚಿಕಿತ್ಸೆಗಳ ಯಾದಿ ಇವುಗಳನ್ನು ಸಹಕಾರ ಇಲಾಖೆಯ ಸಹಕಾರ ಸಿಂಧು ವೆಬ್ಸೈಟ್ನಲ್ಲಿ/ಟ್ರಸ್ಟ ವೆಬ್ಸೈಟ್ನಲ್ಲೂ ಅಪ್ಲೋಡ್ ಮಾಡಲಾಗುವುದು.
18. ಸದಸ್ಯರು ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಒದಗಿಸತಕ್ಕದು.
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698
]]>
2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ತುಂಬಿನ ಬೆಳೆಹಾನಿ ಆಗಿರುವ ಹಾಗೂ ಅರ್ಜಿ ಸಲ್ಲಿಸಿರುವ ರೈತರಿಗೆ ಸ್ಥಳಿಯ ಗಂಡಾಂತರದಡಿ(localised calamity) ಇನ್ಸುರೆನ್ಸ್ ಕಂಪನಿಯರು ವಿಮಾದಾರರ ಖಾತೆಗೆ ಬೆಳೆ ವಿಮೆ ಹಣ ಬಿಡುಗಡೆ ಮಾಡಿದ್ದಾರೆ.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ 3.0 ಸರ್ಕಾರ ರೈತರಿಗೆ ಯಾವ ಕೊಡುಗೆ ನೀಡಲಿದೆ ಎಂದು ಚರ್ಚೆಗಳು ನಡೆಯುತ್ತಿವೆ. ಹೊಸ ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗುತ್ತಿದೆ. ಬಜೆಟ್ನಲ್ಲಿ ಕೃಷಿ ವಲಯಕ್ಕೆ ಸಿಗುವ ಭರವಸೆಗಳೇನು?, ರೈತರ ಕಲ್ಯಾಣಕ್ಕಾಗಿ ಸರ್ಕಾರ ಯಾವ ಯಾವ ಘೋಷಣೆಗಳನ್ನು ಮಾಡಲಿದೆ?ಎಂದು ಕಾದು ನೋಡಬೇಕಿದೆ.
ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಕೇಂದ್ರ ಬಜೆಟ್ 2025-26 ಮಂಡಿಸಲಿದ್ದಾರೆ. ರೈತರ ಹಿತಾಸಕ್ತಿ ಕಾಪಾಡಲು ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿರುವ ಸರ್ಕಾರ, ಬಜೆಟ್ನಲ್ಲಿಯೂ ಹೊಸ ಘೋಷಣೆ ಮಾಡಲಿದೆ ಎಂದು ಅಂದಾಜಿಸಲಾಗಿದೆ.
ಪ್ರಮುಖವಾಗಿ ಬಜೆಟ್ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಕಿಸಾನ್ ಕ್ರೆಡಿಟ್ ಕಾರ್ಡ್ಗಳ ಮಿತಿಯನ್ನು ಹೆಚ್ಚಿಸಲಿದ್ದಾರೆ. ಜಿಎಸ್ಟಿ ಕಡಿಮೆ ಮಾಡಲಿದ್ದಾರೆ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚುವರಿ ಅನುದಾನವನ್ನು ನೀಡುವ ನಿರೀಕ್ಷೆ ಇದೆ.
PM Kisan Samman: ಪಿಎಂ ಕಿಸಾನ್ ಸಮ್ಮಾನ್ ನಿಧಿ ಹಣ 12,000ಕ್ಕೆ ಏರಿಕೆ
ರೈತರ ಕಲ್ಯಾಣಕ್ಕೆ ಆದ್ಯತೆ: ರೈತರ ಆದಾಯವನ್ನು ಹೆಚ್ಚಿಸಬೇಕು, ಅವರ ಕಲ್ಯಾಣಕ್ಕೆ ಆದ್ಯತೆ ನೀಡಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಗುರಿಯಾಗಿದೆ. ಆದ್ದರಿಂದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.
ಸರ್ಕಾರ 2025-26ನೇ ಸಾಲಿನ ಬಜೆಟ್ನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3 ರಿಂದ 5 ಲಕ್ಷಕ್ಕೆ ಏರಿಕೆ ಮಾಡುವ ನಿರೀಕ್ಷೆ ಇದೆ. ಇದರಿಂದಾಗಿ ರೈತರು ಕೃಷಿ ಕ್ಷೇತ್ರದ ಮೇಲೆ ಹೆಚ್ಚಿನ ಹೂಡಿಕೆ ಮಾಡಲು ಅನುಕೂಲವಾಗಲಿದೆ.
ರೈತರಿಗೆ ಅನುಕೂಲ ಮಾಡಿಕೊಡಲು ಬಜೆಟ್ನಲ್ಲಿ ಬಿತ್ತನೆ ಬೀಜ, ರಸಗೊಬ್ಬರದ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಕಡಿಮೆ ಮಾಡುವ ನಿರೀಕ್ಷೆ ಇದೆ. ಜಿಎಸ್ಟಿ ಕಡಿಮೆ ಮಾಡಿದರೆ ದರಗಳು ಕಡಿಮೆಯಾಗಲಿದ್ದು, ರೈತರ ಹಣವೂ ಉಳಿತಾಯವಾಗಲಿದೆ.
ಹಿಂದಿನ ಬಜೆಟ್ನಲ್ಲಿ ಕೃಷಿ ಕ್ಷೇತ್ರ, ಕೃಷಿ ಸಂಬಂಧಿತ ಯೋಜನೆಗಳಿಗೆ ಸರ್ಕಾರ 65,529 ಕೋಟಿ ರೂ. ಅನುದಾನ ಮೀಸಲಿಟ್ಟಿತ್ತು. ಈ ಬಾರಿ ಬಜೆಟ್ನಲ್ಲಿ ಇದನ್ನು ಶೇ 5 ರಿಂದ 7ರಷ್ಟು ಹೆಚ್ಚಳ ಮಾಡುವ ನಿರೀಕ್ಷೆ ಇದ್ದು, ಇದರಿಂದಾಗಿ ಹೆಚ್ಚಿನ ಅನುದಾನ ಲಭ್ಯವಾಗಲಿದೆ.
ಕೇಂದ್ರ ಸರ್ಕಾರ ರೈತರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಪ್ರಮುಖ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ. ಈ ಯೋಜನೆಯಡಿ ರೈತರಿಗೆ ನೀಡುವ ಹಣಕಾಸಿನ ಬೆಂಬಲವನ್ನು ಹೆಚ್ಚಳ ಮಾಡುವ ನಿರೀಕ್ಷೆ ಇದೆ.
ಯೋಜನೆಯಡಿ ಕೃಷಿಯೋಗ್ಯ ಭೂಮಿ ಹೊಂದಿರುವ ರೈತ ಕುಟುಂಬಗಳಿಗೆ ಹಣಕಾಸಿನ ನೆರವು ನೀಡಲಾಗುತ್ತದೆ. ಸದ್ಯ ಯೋಜನೆಯಡಿ ರೂ. 6000 ಅನ್ನು ವಾರ್ಷಿಕವಾಗಿ ಮೂರು ಸಮಾನ ಕಂತುಗಳಲ್ಲಿ ರೂ. 2000 ದಂತೆ ನೇರವಾಗಿ ರೈತರ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತಿದೆ. ಇದನ್ನು 12,000 ರೂ.ಗಳಿಗೆ ಏರಿಕೆ ಮಾಡಲಾಗುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ.
2024ರ ಆಗಸ್ಟ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 'ಕೃಷಿ ಮೂಲಸೌಕರ್ಯ ನಿಧಿ' ಅಡಿಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿತ್ತು. ದೇಶದಲ್ಲಿ ಕೃಷಿ ಮೂಲಸೌಕರ್ಯವನ್ನು ಹೆಚ್ಚಿಸಲು ಮತ್ತು ಬಲಪಡಿಸಲು ಮತ್ತು ರೈತ ಸಮುದಾಯವನ್ನು ಬೆಂಬಲಿಸಲು ಕೃಷಿ ಮೂಲಸೌಕರ್ಯ ನಿಧಿ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಲು ಸರ್ಕಾರವು ಹಲವು ಕ್ರಮಗಳನ್ನು ಘೋಷಿಸಿತ್ತು.
]]>ಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಅದೇನು ಅಂದ್ರೇ ಜಸ್ಟ್ ಈ ನಂಬರ್ ಗೆ ವಾಟ್ಸಾಪ್ (WhatsApp) ಮಾಡಿ ಸಾಕು.
ಅದು ಹೇಗೆ ಅಂತ ಮುಂದೆ ಓದಿ.
ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಗ್ರಾಮ ಪಂಚಾಯ್ತಿ ಸೇವೆಗಳು ಕುಳಿತಲ್ಲೇ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭಿಸಲಾಗಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಪಡೆಯಬಹುದಾಗಿದೆ.
ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ.
ಕುಂದು-ಕೊರತೆಗಳನ್ನು ಹಾಗೂ ಸಮಸ್ಯೆಗಳನ್ನು ದಾಖಲಿಸಲು ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಪಂಚಮಿತ್ರ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ.
ಗ್ರಾಮೀಣ ಜನತೆ ತಮ್ಮೆಲ್ಲಾ ಅಹವಾಲುಗಳನ್ನು ದಾಖಲಿಸಲು ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಬಹುದು. ಅಥವಾ ಅದೇ ಸಂಖ್ಯೆಯಲ್ಲಿ ವಾಟ್ಸಾಪ್ ಚಾಟ್ ಮೂಲಕವೂ ಅಹವಾಲು ಸಲ್ಲಿಸಬಹುದು.
ಸಾರ್ವಜನಿಕರು ತಮಗೆ ಅವಶ್ಯಕತೆ ಇರುವ ಗ್ರಾ.ಪಂ.ಗಳಲ್ಲಿ ಲಭ್ಯ ಸೇವೆಗಳಿಗೆ ಅರ್ಜಿ ಸಲ್ಲಿಸಲು, ವಿವಿಧ ಮಾಹಿತಿ, ವಿವರಗಳನ್ನು ಪಡೆಯಲು ಹಲವಾರು ವೆಬ್ಸೈಟ್ ಮತ್ತು ಪೋರ್ಟಲ್ಗಳಿಗೆ ಭೇಟಿ ನೀಡಬೇಕಾಗಿತ್ತು. ಅಲ್ಲದೇ, ಗ್ರಾ.ಪಂ.ಗಳಿಗೆ ಸಂಬಂಧಿಸಿದ ಎಲ್ಲಾ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಲು ಯಾವುದೇ ನಿರ್ದಿಷ್ಟವಾದ ವೆಬ್ಸೈಟ್ ಅಥವಾ ಪೋರ್ಟಲ್ಗಳು ಇರಲಿಲ್ಲ. ಈ ಹಿನ್ನೆಲೆಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ಪಂಚಮಿತ್ರ ಎಂಬ ವಿನೂನತ ವಾಟ್ಸ್ಆ್ಯಪ್ ಚಾಟ್ ಅನ್ನು ಅನುಷ್ಠಾನಕ್ಕೆ ತರಲಾಗಿದೆ. ಪಂಚಮಿತ್ರದ ವಾಟ್ಸ್ಆ್ಯಪ್ ನಂ.
ಅಲ್ಲದೆ, ಚುನಾಯಿತ ಪ್ರತಿನಿಧಿಗಳ ವಿವರಗಳು, ಅಧಿಕಾರಿ, ಸಿಬ್ಬಂದಿ ವಿವರಗಳು, ಪೂರ್ಣಗೊಂಡ ಗ್ರಾಮ ಪಂಚಾಯಿತಿ ಸಭೆಗಳ ನಡಾವಳಿಗಳು, ಗ್ರಾಮ ಪಂಚಾಯಿತಿಗಳ ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು, ಟೆಂಡರ್ಗಳು, ಸೇವೆಗಳ ವಿವರಗಳು, ಸ್ವ-ಸಹಾಯ ಗುಂಪಿನ ವಿವರಗಳು, ಆರ್ಟಿಐ ದಾಖಲೆಗಳು ಲಭ್ಯವಾಗಲಿವೆ.
ವಾಟ್ಸಪ್ ಚಾಟ್ನಲ್ಲಿ ಮಾಹಿತಿ ಪಡೆಯೋದು ಹೇಗೆ?
ನಿಮ್ಮ ಮೊಬೈಲ್ನಲ್ಲಿ ಇಲಾಖೆಯ ವಾಟ್ಸ್ಆ್ಯಪ್ ಚಾಟ್ ನಂಬರ್-
ನಂತರ ಭಾಷೆಯನ್ನು ಆಯ್ಕೆ ಮಾಡಿ
ನಂತರ ತಾನಾಗಿಯೇ ಕೆಲ ಆಯ್ಕೆಗಳು ಆರಂಭವಾಗುತ್ತಾ ಸಾಗುತ್ತದೆ. ಕ್ರಮ ಸಂಖ್ಯೆಗಳನ್ನು ನಮೂದಿಸುವ ಮೂಲಕ ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮ ಆಯ್ಕೆ ಮಾಡಿಕೊಳ್ಳಿ
ನೀವು ಬಯಸುವ ಗ್ರಾ.ಪಂಚಾಯಿತಿ ಆಯ್ಕೆ ಮಾಡಿಕೊಂಡು ಅಲ್ಲಿನ ಚುನಾಯಿತಿ ಪ್ರತಿನಿಧಿಗಳು, ಸಿಬ್ಬಂದಿಯ ಮಾಹಿತಿ ಪಡೆಯಬಹುದು.
ಅದೇ ರೀತಿ ಸ್ವಾಧೀನ ಪ್ರಮಾಣಪತ್ರ, ರಸ್ತೆ, ಅಗೆವುದಾಕ್ಕಾಗಿ ಅನುಮತಿ, ಕೈಗಾರಿಕಾ/ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ, ನಿರಾಕ್ಷೇಪಣಾ ಪತ್ರ, ನರೇಗಾ ಅಡಿಯಲ್ಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ, ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು, ಹೊಸ/ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ/ನಿಯಮಿತಗೊಳಿವಿಕರ, ಹೊಸ/ಅಸ್ತಿತ್ವದಲ್ಲಿರುವ ಓವರ್ಗೌಂಡ್ ಕೇಬಲ್ ಮೂಲಸೌಕರ್ಯ/ಭೂಗತ ಕೇಬಲ್ ಮೂಲಸೌಕರ್ಯಗಳ ಅನುಮತಿ/ನಿಯಮಿತಗೊಳಿಸುವಿಕೆ, ನಮೂನೆ 9/11ಎ, ನಮೂನೆ 11 ಬಿ ಸೇರಿ ಎಲ್ಲ ಸೇವೆಗಳಿಗೆ ಅರ್ಜಿ ಸಲ್ಲಿಸಬಹುದು. ಕುಂದುಕೊರತೆಗಳನ್ನು ದಾಖಲಿಸಬಹುದು.
ಈ ಮೇಲಿನ ನಾಡಕಛೇರಿ ಸೇವೆಗಳನ್ನು ಪಡೆಯಲು, (https://nadakacheri.karnataka.gov.in/Online_service/loginpage.aspx ) ವೆಬ್ ಸೈಟ್ ಗೆ ಭೇಟಿ ನೀಡಿ
ಪಂಚಮಿತ್ರ ವೆಬ್ಸೈಟ್ ಲಿಂಕ್ https://panchatantra.kar.nic.in/panchamitra/
]]>
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://dssp.karnataka.gov.in/dssp/villageWise_list_Of_beneficiaries.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಅಥವಾ ಪಟ್ಟಣ select ಮಾಡಿ, ಹೊಬಳಿ,ಗ್ರಾಮ select ಮಾಡಿ,Captch type ಮಾಡಿ, Search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿ ಪಿಂಚಣಿ ಪಡೆಯುವವರ ಹೆಸರು ಸಿಗಲಿದೆ
(ಸೂಚನೆ-Desktop mode open ಮಾಡಿಕೊಳ್ಳಿ)
Pension status-ಈ ತಿಂಗಳ ನಿಮ್ಮ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://dssp.karnataka.gov.in/dssp/Beneficiary_Status.aspx
ನಂತರ ನಿಮ್ಮ ಗ್ರಾಮದ ಪಟ್ಟಿಯಲ್ಲಿ ನಿಮ್ಮ beneficiary ID ಹಾಕಿ,captcha type ಮಾಡಿ search ಮೇಲೆ ಕ್ಲಿಕ್ ಮಾಡಿ
ನಂತರ click here to get payment details from SSP portal ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ beneficiary ID ಹಾಗೂ captcha code ಹಾಕಿ search ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ಇಲ್ಲಿಯವರೆಗೆ ಜಮಾ ಆದ ಪಿಂಚಣೆ ಹಣ ಮಾಹಿತಿ ದೊರೆಯಲಿದೆ
2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)
1.ಅಶ್ವಿನಿ-
ದಿನಾಂಕ-14-4-2025
ಸಾಮಾನ್ಯ ಮಳೆ
ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,
2.ಭರಣಿ
ದಿನಾಂಕ-28-4-2025
ಸಾಮಾನ್ಯ ಮಳೆ
ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು
3.ಕೃತಿಕಾ
ದಿನಾಂಕ-11-5-2025
ಸಾಮಾನ್ಯ ಮಳೆ
ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು
4.ರೋಹಿಣಿ-
ದಿನಾಂಕ-25-5-2025
ಉತ್ತಮ ಮಳೆ
ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು
5.ಮೃಗಶಿರ
ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ
ಉತ್ತಮ ಮಳೆ
ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು
6.ಆರಿದ್ರಾ
ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)
ಉತ್ತಮ ಮಳೆ
ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.
7.ಪುನರ್ವಸು
ದಿನಾಂಕ-6-7-2025
ಉತ್ತಮ ಮಳೆ
ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು.
8.ಪುಷ್ಯ
ದಿನಾಂಕ-20-7-2025
ಉತ್ತಮ ಮಳೆ
ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ) ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.
9.ಆಶ್ಲೇಷ
ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ
ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು
10.ಮಘ
ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ
ಉತ್ತಮ ಮಳೆ
ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.
11.ಹುಬ್ಬ
ದಿನಾಂಕ-31-8-2025
ಉತ್ತಮ ಮಳೆ
ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ. ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ
12.ಉತ್ತರ
ದಿನಾಂಕ-13-09-2025
ಉತ್ತಮ ಮಳೆ
ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ
13.ಹಸ್ತ
ದಿನಾಂಕ-27-9-2025
ಉತ್ತಮ ಮಳೆ
14.ಚಿತ್ತ
ದಿನಾಂಕ-11-10-2025
ಉತ್ತಮ ಮಳೆ
ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.
15.ಸ್ವಾತಿ
ದಿನಾಂಕ-24-10-2025
ಉತ್ತಮ ಮಳೆ
ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.
16.ವಿಶಾಖ
ದಿನಾಂಕ-6-11-2025
ಉತ್ತಮ ಮಳೆ
ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.
ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.
https://krushirushi.in/contact-us
ಇಂತಿ ನಿಮ್ಮ
ಶಿವನಗೌಡ ಪಾಟೀಲ
M.Sc(ಕೃಷಿ), ಕೀಟಶಾಸ್ತ್ರ
]]>ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿದರೆ ನಿಮಗೆ pdf download ಮಾಡಿಕೊಂಡು ನಿಮ್ಮ ಹೆಸರು ಚೆಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಡಿಸೆಂಬರ್ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ನೀಡುತ್ತಿರುವ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗದಿದ್ದರೆ ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯಲ್ಲಿ ಇಕೆವೈಸಿ(Ration card Ekyc) ಕಡ್ಡಾಯವಾಗಿ ಪೂರ್ಣಗೊಳಿಸಿಕೊಳ್ಳಬೇಕು ಎಂದು ಆಹಾರ ಇಲಾಖೆ ಸೂಚನೆ ನೀಡಿದೆ.
ಈವರೆಗೂ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ರಾಜ್ಯದ ಯಾವುದೇ ಪಡಿತರ ಚೀಟಿದಾರರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯಲ್ಲಿ ಇಕೆವೈಸಿ ಕಡ್ಡಾಯವಾಗಿ ಪೂರ್ಣಗೊಳಿಸಿಕೊಳ್ಳಬೇಕು.
ಪಡಿತರ ಚೀಟಿದಾರರ ಖಾತೆಗೆ ನೇರವಾಗಿ ಹಣ ವರ್ಗಾವಣೆಗೆ ಸಂಬಂಧಿಸಿದಂತೆ, ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಕಾರ್ಡ್ನೊಂದಿಗೆ ಬ್ಯಾಂಕಿನಲ್ಲಿ ಇಕೆವೈಸಿ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು, ಹಾಗೆಯೇ ಖಾತೆ ಹೊಂದಿರದ ಕಾರ್ಡುದಾರರು ರಾಷ್ಟ್ರೀಕೃತ ಬ್ಯಾಕ್ನಲ್ಲಿ ಹೊಸ ಖಾತೆ ಅಥವಾ ಅಂಚೆ ಇಲಾಖೆಯಲ್ಲಿ ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್ ಖಾತೆಯನ್ನು ಮಾಡಿಸಿಕೊಳ್ಳಬೇಕು.
Ration card ekyc status-ನಿಮ್ಮ ರೇಷನ್ ಕಾರ್ಡ್ ಇಕೆವೈಸಿ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ e-status ಮೇಲೆ ಕ್ಲಿಕ್ ಮಾಡಿ
ನಂತರ DBT Status ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ select ಮಾಡಿ
ನಂತರ "Status of Ration Card/ಪಡಿತರ ಚೀಟಿ ವಿವರ"ಮೇಲೆ ಕ್ಲಿಕ್ ಮಾಡಿ
ನಂತರ without OTP Select ಮಾಡಿ
ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ರೇಷನ್ ಕಾರ್ಡ್ ನ ಸಂಪೂರ್ಣ ವಿವರ,ನಿಮ್ಮ ಕುಟುಂಬದಲ್ಲಿ ಎಷ್ಟು ಜನರ ಇಕೆವೈಸಿ ಆಗಿದೆ,ಎಷ್ಟು ಜನರ ಇಕೆವೈಸಿ ಬಾಕಿ ಇದೆ ಎಂಬ ವಿವರ ಹಾಗೂ ಇಲ್ಲಿಯವರೆಗೂ ಎಷ್ಟು ಅಕ್ಕಿ ಪಡೆದಿದ್ದಿರಿ ಎಂಬ ಮಾಹಿತಿ ಸಿಗಲಿದೆ
ಇಕೆವೈಸಿ ಆಗಿರದಿದ್ದರೆ,ಹತ್ತಿರದ ಪಡಿತರ ವಿತರಿಸುವ ಕೇಂದ್ರಕ್ಕೆ ಹೋಗಿ ಬಯೊಮೆಟ್ರಿಕ್ ನಲ್ಲಿ ನಿಮ್ಮ ಹೆಬ್ಬೆಟ್ಟು ಒತ್ತಿ ,ಇಕೆವೈಸಿ ಮಾಡಿಸಿ
2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ತುಂಬಿನ ಬೆಳೆಹಾನಿ ಆಗಿರುವ ಹಾಗೂ ಅರ್ಜಿ ಸಲ್ಲಿಸಿರುವ ರೈತರಿಗೆ ಸ್ಥಳಿಯ ಗಂಡಾಂತರದಡಿ(localised calamity) ಇನ್ಸುರೆನ್ಸ್ ಕಂಪನಿಯರು ವಿಮಾದಾರರ ಖಾತೆಗೆ ಬೆಳೆ ವಿಮೆ ಹಣ ಬಿಡುಗಡೆ ಮಾಡಿದ್ದಾರೆ.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ರಾಜ್ಯದ 8.90 ಲಕ್ಷ ಹಾಲು ಉತ್ಪಾದಕರಿಗೆ ₹649.76 ಕೋಟಿ ಪ್ರೋತ್ಸಾಹಧನ ನೇರ ಖಾತೆಗೆ ಜಮೆ
Milk incentive status-ಇಲ್ಲಿಯವರೆಗೂ ಜಮಾ ಆಗಿರುವ ಹಾಲಿನ ಪ್ರೋತ್ಸಾಹಧನ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ "ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಪ್ರೋತ್ಸಾಹಧನ ಮಾಹಿತಿ ಸಿಗಲಿದೆ.
ಹೀಗೂ ಚೆಕ್ ಮಾಡಬಹುದು
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/Klda/MilkIncentive?ServiceId=5399&Type=TABLE&DepartmentId=3119
ನಂತರ ನಿಮ್ಮ ಜಿಲ್ಲೆ,ತಾಲೂಕು,Milk Union,ಗ್ರಾಮ, select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ನಿಮ್ಮ ಗ್ರಾಮದಲ್ಲಿ ಯಾರಿಗೆಲ್ಲಾ ಎಷ್ಟು ಹಾಲಿನ ಪ್ರೋತ್ಸಾಹಧನ(Milk incentive) ಬಂದಿದೆ ಎಂದು ತಿಳಿಯಲಿದೆ
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>
ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ (FRUITS ID) ಪ್ರೊಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುದು.
ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.
ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು (FRUITS ID) ಪ್ರೊಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೊಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನುಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ (FRUITS ID) ಪ್ರೊಟ್ಸ್ ಐಡಿ ಸೃಜಿಸಿಕೊಳ್ಳಬಹುದು. (FRUITS ID) ಪ್ರೊಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.
ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್/Aadhaar number ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ
ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್(Gram one online application) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಟಾನಗೊಳಿಸುತ್ತಿದ್ದು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆಸಕ್ತಿವುಳ್ಳವರು ಅರ್ಜಿಗಳನ್ನು https://www.karnatakaone.gov.in/Public/GramOneFrachiseeTerms ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು ಹಾಗೂ ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ ಅರ್ಜಿ ಸಲ್ಲಿಸಿ
https://youtu.be/eX2iQzi62sY?si=ianjp3DGKa_6gFz_
ಗ್ರಾಮಓನ್ ನಲ್ಲಿ ಸಿಗುವ ಸೇವೆಗಳು ಹಾಗೂ ಅದಕ್ಕೆ ಬೇಕಾದ ದಾಖಲೆಗಳ ಪಟ್ಟಿಯನ್ನು ಈ ಕೆಳಗಿನ PDF ಮೂಲಕ ಡೌನ್ಲೋಡ್ ಮಾಡಿಕೊಳ್ಳಿ
]]>ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಬರುತ್ತಿರುವ ಎರಡು ಸಾವಿರ ರೂಪಾಯಿ 16 ನೇ ಕಂತಿನ ಹಣ ಜನವರಿ 14 ರಿಂದ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಧಾರವಾಡ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತು ಬೆಳೆ ಸಮೀಕ್ಷೆ ದತ್ತಾಂಶ, ಫ್ರೂಟ್ಸ್ ಐಡಿ (FRUITS ID) ಹೊಂದಿರುವ ರೈತರಿಗೆ ಬೆಳೆಹಾನಿ ಅಂತಿಮ ಜಂಟಿ ಸಮೀಕ್ಷೆ ವರದಿಯ ಆಧಾರದ ಮೇಲೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ
ಮೊದಲ ಮತ್ತು ಎರಡನೇ ಹಂತದಲ್ಲಿ ಇಲ್ಲಿಯವರೆಗೆ ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯ ಏಳು ತಾಲ್ಲೂಕಿನ 69,573 ರೈತ ಫಲಾನುಭವಿಗಳಿಗೆ ರೂ.48.45 ಕೋಟಿಗಳನ್ನು ಒಟ್ಟು ಕ್ಷೇತ್ರ 55,809.19 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಬೆಳೆ ಪರಿಹಾರ ಜಮಾ ಪ್ರಾರಂಬವಾಗಿದ್ದು,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ಅಂತಿಮ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ದಿನಾಂಕ:10-01-2025 ರಂದು ಪ್ರಕಟಿಸಲಾಗಿದೆ. ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ"ದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://kseab.karnataka.gov.in/storage/pdf-files/March_2025_SSLC_Exam-1_Final_TIMETABLE.pdf
ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ PUC exam time table-2025
https://kseab.karnataka.gov.in/storage/pdf-files/March_2025_PUCII_Exam-1_Final_TIMETABLE.pdf
]]>
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pradhan mantri Kisan samman Nidhi Yojana) ಯೋಜನೆಯಡಿ ಹೊಸ ಅರ್ಜಿದಾರರು ಕಿಸಾನ್ ಐಡಿ (Kisan pehechana pathra) ಪಡೆಯುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಪ್ರತಿ ತಿಂಗಳು ಸುಮಾರು 2 ಲಕ್ಷ ಹೊಸ ಅರ್ಜಿಗಳು ಬರುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಈ ಕ್ರಮ ಕೈಗೊಂಡಿದೆ.
ಅಧಿಕಾರಿಯೊಬ್ಬರ ಪ್ರಕಾರ, "ಈ ರೈತ ಐಡಿ ಅರ್ಜಿದಾರ ರೈತನು ಭೂಮಿಯ ಮಾಲೀಕತ್ವ ಹೊಂದಿದ್ದಾನೆ ಎಂಬುದನ್ನು ದೃಢಪಡಿಸುತ್ತದೆ. ಇದು ಪಿಎಂ-ಕಿಸಾನ್ ನೋಂದಣಿ ಪ್ರಕ್ರಿಯೆಯನ್ನು ಬಹಳ ಸರಳಗೊಳಿಸುತ್ತದೆ ಮತ್ತು ರೈತರು ಯೋಜನೆಯ ಪ್ರಯೋಜನಗಳನ್ನು ಪಡೆಯುವುದನ್ನು ಸುಲಭಗೊಳಿಸುತ್ತದೆ.
10 ರಾಜ್ಯಗಳಲ್ಲಿ ಹೊಸ ನಿಯಮ ಜಾರಿಗೆ
ಜನವರಿ 1, 2025 ರಿಂದ ಹೊಸ ಅರ್ಜಿದಾರರಿಗೆ ಕಿಸಾನ್ ಐಡಿ ಕಡ್ಡಾಯಗೊಳಿಸಲಾಗಿದೆ. ಈ ನಿಯಮವನ್ನು ಪ್ರಸ್ತುತ 10 ರಾಜ್ಯಗಳಲ್ಲಿ ಜಾರಿಗೆ ತರಲಾಗಿದೆ - ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನ ಮತ್ತು ಉತ್ತರ ಪ್ರದೇಶ. ಈ ರಾಜ್ಯಗಳು ದೇಶದ ಪಿಎಂ-ಕಿಸಾನ್ ಫಲಾನುಭವಿಗಳಲ್ಲಿ 84% ಕ್ಕಿಂತ ಹೆಚ್ಚು (ಸುಮಾರು 9.25 ಕೋಟಿ) ಜನರನ್ನು ಹೊಂದಿವೆ. ನಂತರ ಇತರ ರಾಜ್ಯಗಳಲ್ಲಿ ಇದನ್ನು ಜಾರಿಗೆ ತರಲಾಗುವುದು. ಕೃಷಿ ಸಚಿವಾಲಯವು ಈ 10 ರಾಜ್ಯಗಳಿಗೆ ಇದಕ್ಕಾಗಿ ಸೂಚನೆಗಳನ್ನು ನೀಡಿದೆ. ಹೊಸ ಅರ್ಜಿದಾರರು ಈಗ ರೈತ ನೋಂದಾವಣೆಯಲ್ಲಿ ನೋಂದಾಯಿಸಿಕೊಳ್ಳಬೇಕು ಮತ್ತು ಅವರ ಅರ್ಜಿ ನಮೂನೆಯಲ್ಲಿ ತಮ್ಮ ರೈತ ಐಡಿಯನ್ನು ನಮೂದಿಸಬೇಕು.
ಕಿಸಾನ್ ಐಡಿ ಮತ್ತು ಡಿಜಿಟಲ್ ಕೃಷಿ ಮಿಷನ್
ಕಿಸಾನ್ ಪೆಹಚಾನ್ ಪತ್ರವು ಆಧಾರ್ನಂತಹ ವಿಶಿಷ್ಟ ಡಿಜಿಟಲ್ ಗುರುತಾಗಿದ್ದು, ಇದನ್ನು ರಾಜ್ಯದ ಭೂ ದಾಖಲೆ ವ್ಯವಸ್ಥೆಗೆ ಲಿಂಕ್ ಮಾಡಲಾಗುತ್ತದೆ. ಇದು ರೈತರ ಜನಸಂಖ್ಯಾ ಮಾಹಿತಿ, ಬೆಳೆದ ಬೆಳೆಗಳು ಮತ್ತು ಭೂ ಮಾಲೀಕತ್ವದ ಮಾಹಿತಿಯನ್ನು ಒಳಗೊಂಡಿರುತ್ತದೆ. ಈ ಡೇಟಾವನ್ನು ಕೇಂದ್ರ ಸರ್ಕಾರದ ಡಿಜಿಟಲ್ ಕೃಷಿ ಮಿಷನ್ನ ಭಾಗವಾಗಿರುವ ರೈತ ನೋಂದಣಿಯಲ್ಲಿ ಸಂಗ್ರಹಿಸಲಾಗುತ್ತದೆ.
ಡಿಜಿಟಲ್ ಕೃಷಿ ಮಿಷನ್ ಅಡಿಯಲ್ಲಿ, ಕೃಷಿ ಕ್ಷೇತ್ರದಲ್ಲಿ ಡಿಜಿಟಲ್ ಮೂಲಸೌಕರ್ಯವನ್ನು ರಚಿಸಲು ಕೇಂದ್ರ ಸರ್ಕಾರವು ಮೂರು ನೋಂದಣಿಗಳನ್ನು ಯೋಜಿಸಿದೆ. ರೈತರ ನೋಂದಾವಣೆ ಪ್ರಮುಖ ನೋಂದಣಿಗಳಲ್ಲಿ ಒಂದಾಗಿದೆ. ಮಾರ್ಚ್ 2025 ರ ವೇಳೆಗೆ 6 ಕೋಟಿ ರೈತ ಗುರುತಿನ ಚೀಟಿಗಳನ್ನು ರಚಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಜನವರಿ 7, 2025 ರ ಹೊತ್ತಿಗೆ, ಒಂದು ಕೋಟಿ ರೈತ ಗುರುತಿನ ಚೀಟಿಗಳನ್ನು ರಚಿಸಲಾಗಿದೆ.
ಪಿಎಂ-ಕಿಸಾನ್ ಯೋಜನೆ ಮತ್ತು ಇತ್ತೀಚಿನ ನವೀಕರಣಗಳು
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಅರ್ಹ ರೈತ ಕುಟುಂಬಗಳಿಗೆ ವಾರ್ಷಿಕ 6,000 ರೂ.ಗಳನ್ನು ಮೂರು ಸಮಾನ ಕಂತುಗಳಲ್ಲಿ (ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.) ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಈ ಯೋಜನೆಯನ್ನು ಲೋಕಸಭಾ ಚುನಾವಣೆಗೆ ಸ್ವಲ್ಪ ಮೊದಲು, ಫೆಬ್ರವರಿ 24, 2019 ರಂದು ಪ್ರಾರಂಭಿಸಲಾಯಿತು. ಈ ಯೋಜನೆಯ 18 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 5, 2024 ರಂದು ಮಹಾರಾಷ್ಟ್ರದ ವಾಶಿಮ್ನಲ್ಲಿ ಬಿಡುಗಡೆ ಮಾಡಿದರು. ಈ ಬಾರಿ ಪಿಎಂ-ಕಿಸಾನ್ ಮೊತ್ತವನ್ನು 9.4 ಕೋಟಿ ರೈತರಿಗೆ ವರ್ಗಾಯಿಸಲಾಗಿದೆ. ಇತ್ತೀಚೆಗೆ, ಸಂಸದೀಯ ಸಮಿತಿಯು ಪಿಎಂ-ಕಿಸಾನ್ ಯೋಜನೆಯಡಿ ರೈತರಿಗೆ ನೀಡಲಾಗುವ ಮೊತ್ತವನ್ನು ಪ್ರಸ್ತುತ ವರ್ಷಕ್ಕೆ 6,000 ರೂ.ಗಳಿಂದ 12,000 ರೂ.ಗಳಿಗೆ ಹೆಚ್ಚಿಸಲು ಶಿಫಾರಸು ಮಾಡಿದೆ.
ಕರ್ನಾಟಕದಲ್ಲಿ ಸದ್ಯ FID ಯನ್ನು ಕಿಸಾನ್ ಪೆಹೆಚಾನ್ ಪತ್ರವಾಗಿ ಬಳಸಲಾಗುತ್ತಿದೆ. ಹಾಗಾದರೆ ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್/Aadhaar number ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
]]>2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನಾಧಾರಿತ ಬೆಳೆವಿಮೆ(WBCIS)ಯೋಜನೆಯಡಿ ಜಿಲ್ಲೆಯ 3584 ರೈತರಿಗೆ ರೂ.2333.01 ಲಕ್ಷ ವಿಮಾ ಮೊತ್ತವನ್ನು ಕ್ಷೇಮಾ ಇನ್ಸುರೆನ್ಸ್ ಕಂಪನಿಯರು ವಿಮಾದಾರರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698
ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನಧಾರಿತ ಬೆಳೆವಿಮೆ(WBCIS) ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಅಡಿಕೆ, ಮಾವು ಮತ್ತು ದಾಳಿಂಬೆ ಬೆಳೆಗೆ ಜಿಲ್ಲೆಯ 3648 ರೈತರು ರೂ.226.99 ಲಕ್ಷ ಪ್ರೀಮಿಯಂ ಪಾವತಿಸಿ ನೋಂದಾಯಿಸಿಕೊಂಡಿದ್ದು, ಈ ಪೈಕಿ 3584 ರೈತರಿಗೆ ರೂ.2333.01 ಲಕ್ಷ ವಿಮಾ ಮೊತ್ತವನ್ನು ಕ್ಷೇಮಾ ಇನ್ಸುರೆನ್ಸ್ ಕಂಪನಿಯರು ಜಿಲ್ಲೆ ಎಲ್ಲಾ ವಿಮಾದಾರರ ಖಾತೆಗೆ ಬಿಡುಗಡೆ ಮಾಡಿರುತ್ತಾರೆ. ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಸಹಕರಿಸಿದ ಜಿಲ್ಲೆಯ ಎಲ್ಲ ರೈತರಿಗೆ ಅಭಿನಂದನೆ ಸಲ್ಲಿಸುತ್ತಾ, ಮುಂದಿನ ದಿನಗಳಲ್ಲಿ ಈ ಯೋಜನೆ ಅನುಷ್ಟಾನ ಮಾಡಲು ಸಹಕರಿಸಲು ಕೋರಿದ್ದಾರೆ.
ಮುಂದಿನ ವರ್ಷಗಳಲ್ಲಿ ಈ ಯೋಜನೆಯಡಿ ನೋಂದಾಯಿಸಿಕೊಳ್ಳುವ ರೈತರು ಯೋಜನೆಯ ಸದುಪಯೋಗ ಪಡೆಯಲು ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಕಡ್ಡಾಯವಾಗಿ ಬೆಳೆಯನ್ನು ಇಂದೀಕರಿಸಬೇಕು ಹಾಗೂ ಹಿಂದಿನ 2 ವರ್ಷಗಳಲ್ಲಿ ಬೆಳೆ ಸಮೀಕ್ಷೆ (Crop survey)ತಂತ್ರಾಂಶದಲ್ಲಿ ಕಡ್ಡಾಯವಾಗಿ ಬೆಳೆಯನ್ನು ನೊಂದಾಯಿಸಿಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
ನೆರೆಯ ತೆಲಂಗಾಣದಲ್ಲಿ ₹2 ಲಕ್ಷದವರೆಗೆ
ರೈತರ ಸಾಲ ಮನ್ನಾ ಮಾಡಲು ಅಲ್ಲಿನ ಸರ್ಕಾರ ನಿರ್ಧಾರ
ಮಾಡಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರೈತರ ಸಾಲ ಮನ್ನಾ
ಮಾಡಿ ರೈತರನ್ನು ಋಣಮುಕ್ತರನ್ನಾಗಿಸಿ' ಎಂದು ವಿಧಾನಸಭೆ
ವಿರೋಧಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದ್ದಾರೆ
Belesala manna status 2024-ಬೆಳೆಸಾಲ ಮನ್ನಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ
ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ/farmer" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
]]>
ರಾಜ್ಯದಲ್ಲಿ ಸಾವಯವ ಹಾಗೂ ಸಿರಿಧಾನ್ಯಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಆಶಯದೊಂದಿಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಜ.23ರಿಂದ 25ರವರೆಗೆ 'ಅಂತಾರಾಷ್ಟ್ರೀಯ ವಾಣಿಜ್ಯ ಮೇಳಸಾವಯವ ಮತ್ತು ಸಿರಿಧಾನ್ಯ 2025' ಆಯೋಜಿಸಲಾಗಿದೆ.
ಜ.23ರಿಂದ 3ದಿನ ಸಾವಯವ ಮತ್ತು ಸಿರಿಧಾನ್ಯಗಳ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ನಡೆಯಲಿದೆ. ಕಳೆದ ವರ್ಷ ರಾಜ್ಯದಲ್ಲಿ ನಡೆದ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳಕ್ಕೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ. ದೇಶದ ಅನೇಕ ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಬೆಂಗಳೂರಿನ ಪ್ಯಾಲೆಸ್ ಗೌಂಡ್ನ ತ್ರಿಪುರವಾಸಿನಿ ಆವರಣದಲ್ಲಿ ಸಾವಯವ ಮತ್ತು ಸಿರಿಧಾನ್ಯಗಳ ಅಂತರಾಷ್ಟ್ರೀಯ ವಾಣಿಜ್ಯ ಮೇಳವನ್ನು ಆಯೋಜಿಸಲಾಗುತ್ತಿದೆ. ಸದರಿ ಕಾರ್ಯಕ್ರಮಕ್ಕೆ ಹೊರ ರಾಜ್ಯಗಳಲ್ಲಿ ನಡೆಯುವ ಮೇಳಗಳಲಿ ವಾಣಿಜ್ಯ ಆಸಕ್ತರನ್ನು ಆಹ್ವಾನಿಸಲಾಗಿದೆ” ಎಂದು ತಿಳಿಸಿದರು.
*Quick Links for Various Registrations & Bookings for MOITF 2025*
1. *Millet Run 2025:* https://organics-millets.in/reg-itf-2025/smartrun.php
2. *Exhibition Stall Booking*: https://organics-millets.in/reg-itf-2025/Exhibitionform.php
3. *International Conference* : https://organics-millets.in/reg-itf-2025/Conferenceform.php
4. *Paid Food Stall* : https://organics-millets.in/reg-itf-2025/paidFoodStalls.php
5. *Farmer Workshop* : https://organics-millets.in/reg-itf-2025/farmerWorkshop.php
6. *Public Registration* : https://organics-millets.in/reg-itf-2025/public.php
]]>2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಧಾರವಾಡ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತು ಬೆಳೆ ಸಮೀಕ್ಷೆ ದತ್ತಾಂಶ, ಫ್ರೂಟ್ಸ್ ಐಡಿ (FRUITS ID) ಹೊಂದಿರುವ ರೈತರಿಗೆ ಬೆಳೆಹಾನಿ ಅಂತಿಮ ಜಂಟಿ ಸಮೀಕ್ಷೆ ವರದಿಯ ಆಧಾರದ ಮೇಲೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ
ಮೊದಲ ಮತ್ತು ಎರಡನೇ ಹಂತದಲ್ಲಿ ಇಲ್ಲಿಯವರೆಗೆ ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯ ಏಳು ತಾಲ್ಲೂಕಿನ 69,573 ರೈತ ಫಲಾನುಭವಿಗಳಿಗೆ ರೂ.48.45 ಕೋಟಿಗಳನ್ನು ಒಟ್ಟು ಕ್ಷೇತ್ರ 55,809.19 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಬೆಳೆ ಪರಿಹಾರ ಜಮಾ ಪ್ರಾರಂಬವಾಗಿದ್ದು,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್ಐಎಲ್ ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್ ಪ್ಯಾಕೇಜುಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಬುಧವಾರ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಸಂಸ್ಥೆಯ ಡೈರಿ, ಕ್ಯಾಲೆಂಡರ್ ಮತ್ತು ಬಾಂಡ್ ಜೆರಾಕ್ಸ್ ಪೇಪರ್ ಕೂಡ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ʻಎಂಎಸ್ಐಎಲ್ ಮೊದಲಿನಿಂದಲೂ ಗುಣಮಟ್ಟ ಮತ್ತು ವಿಶ್ವಾಸಾರ್ಹತೆಗೆ ಹೆಸರಾಗಿದೆ. ಈಗ ಟೂರ್ ಪ್ಯಾಕೇಜುಗಳ ಮೂಲಕ ಸಂಸ್ಥೆಯು ಜನರಿಗೆ ಮತ್ತಷ್ಟು ಹತ್ತಿರವಾಗುತ್ತಿದೆ. ಈ ಪ್ಯಾಕೇಜುಗಳ ಅಡಿಯಲ್ಲಿ ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಆದಿಕೈಲಾಸ ಮತ್ತು ವಾರಣಾಸಿಗೆ ಪ್ರವಾಸ ಆಯೋಜಿಸಲಾಗುವುದು. ಮುಖ್ಯವಾಗಿ ನಾವು ಆಫ್-ಲೈನ್ ಪ್ರವಾಸಿಗರಿಗೆ ಆದ್ಯತೆ ಕೊಡುತ್ತಿದ್ದೇವೆ,ʼ ಎಂದಿದ್ದಾರೆ.
ಈ ಪ್ಯಾಕೇಜುಗಳಲ್ಲಿ ಸುರಕ್ಷತೆ, ಶುಚಿರುಚಿಯಾದ ಆಹಾರ, ಮನೆ ಬಾಗಿಲಿನಿಂದಲೇ ಕರೆದುಕೊಂಡು ಹೋಗಿ ವಾಪಸ್ ಅಲ್ಲಿಗೇ ಬಿಡುವುದು, ಸಹಾಯಕರ ನೆರವು, ಮಾಸಿಕ ಕಂತುಗಳಲ್ಲಿ ಹಣ ಪಾವತಿ, ಲಕ್ಕಿ ಡ್ರಾ, ಕೈಗೆಟುಕುವ ವೆಚ್ಚದಲ್ಲಿ ಉತ್ತರ ಭಾರತ ಪ್ರವಾಸ ಮುಂತಾದ ಸೌಲಭ್ಯ ಮತ್ತು ಆಕರ್ಷಣೆಗಳಿವೆ. ಗುಂಪು ಪ್ರವಾಸ ಮಾಡಲು ಬಯಸುವವರಿಗೆ ಪ್ರತಿ ಬ್ಯಾಚಿನಲ್ಲಿ ಗರಿಷ್ಠ 100 ಮಂದಿಗೆ ಅವಕಾಶ ಇರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದಲ್ಲದೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆಂದು ʻಸ್ಟಡಿ-ಕಂ-ಪ್ಲೆಷರ್ ಟೂರ್), ಇಕೋ ಟೂರಿಸಂ ಮತ್ತು ಕರಾವಳಿ ಪ್ರದೇಶಗಳ ವೀಕ್ಷಣೆ ಇರುವ ಕೋಸ್ಟಲ್ ಟೂರಿಸಂ ಮುಂತಾದ ಪ್ಯಾಕೇಜುಗಳನ್ನು ರೂಪಿಸಲು ಎಂಎಸ್ಐಎಲ್ ಚಿಂತಿಸುತ್ತಿದೆ. ಸಂಸ್ಥೆಯು ಸದ್ಯಕ್ಕೆ ರೂಪಿಸಿರುವ ಪ್ಯಾಕೇಜಿನಲ್ಲಿ ಕೇವಲ 20 ಸಾವಿರ ರೂ. ವೆಚ್ಚದಲ್ಲಿ 15 ರಿಂದ 18 ದಿನಗಳ ಉತ್ತರ ಭಾರತ ಪ್ರವಾಸ ಮಾಡಿಕೊಂಡು ಬರಬಹುದು ಎಂದು ಅವರು ವಿವರಿಸಿದ್ದಾರೆ.
ಸರಕಾರಿ ಉದ್ಯೋಗಿಗಳನ್ನು ಗಮನದಲ್ಲಿ ಇಟ್ಟುಕೊಂಡು ಮಾಡಿರುವ ಪ್ಯಾಕೇಜಿನಲ್ಲಿ ಮೊದಲು ಶೇ. 50ರಷ್ಟು ಹಣ ಪಾವತಿಸಿ, ಪ್ರವಾಸ ಕೈಗೊಳ್ಳಬಹುದು. ಪ್ರವಾಸ ಮುಗಿಸಿಕೊಂಡು ಬಂದ ಬಳಿಕ ಉಳಿದ ಶೇ. 50ರಷ್ಟು ಹಣವನ್ನು ಮಾಸಿಕ ಕಂತುಗಳಲ್ಲಿ ಕಟ್ಟಬಹುದು. ಹಾಗೆಯೇ ಲಕ್ಕಿ ಡ್ರಾದಲ್ಲಿ ವಿಜೇತರಾಗುವ ಅದೃಷ್ಟಶಾಲಿಗಳು ಡ್ರಾ ನಂತರದ ಹಣವನ್ನು ಪಾವತಿಸಬೇಕಾಗಿಲ್ಲ. ಈ ಎಲ್ಲ ಪ್ಯಾಕೇಜುಗಳಲ್ಲೂ ಎಂಎಸ್ಐಎಲ್ ವತಿಯಿಂದ ಟೂರ್ ಮ್ಯಾನೇಜರ್ ಅಥವಾ ಸಹಾಯಕರೊಬ್ಬರು ಜತೆಗಿರಲಿದ್ದು, ಪ್ರವಾಸಿಗರ ಬೇಕು-ಬೇಡಗಳನ್ನು ಆಲಿಸಿ, ನೆರವು ನೀಡಲಿದ್ದಾರೆ ಎಂದು ಅವರು ನುಡಿದಿದ್ದಾರೆ.
ಪ್ರವಾಸಿಗರಿಗೆ ಆದಷ್ಟು ಕಡಿಮೆ ವೆಚ್ಚದಲ್ಲಿ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ಸಾಧ್ಯವಾಗಬೇಕು ಎನ್ನುವ ಆಶಯದೊಂದಿಗೆ ಎಂಎಸ್ಐಎಲ್ ಮೂಲಕ ಈ ಹೆಜ್ಜೆ ಇಡಲಾಗುತ್ತಿದೆ. ಖಾಸಗಿ ಸಂಸ್ಥೆಗಳ ದರಕ್ಕೆ ಹೋಲಿಸಿದರೆ ನಾವು ನಿಗದಿ ಪಡಿಸಿರುವ ದರ ತುಂಬಾ ಕಡಿಮೆ ಇದೆ. ಹಾಗೆಯೇ ಪ್ರತಿಯೊಂದು ಸೇವೆಯನ್ನೂ ಗುಣಮಟ್ಟದೊಂದಿಗೆ ಒದಗಿಸಲಾಗುವುದು ಎಂದು ಪಾಟೀಲ್ ಹೇಳಿದ್ದಾರೆ.
ಎಂಎಸ್ಐಎಲ್ ಸಂಸ್ಥೆಯ ಟೂರ್ಸ್ ಅಂಡ್ ಟ್ರಾವೆಲ್ಸ್ ವಿಭಾಗವು ಈ ಟೂರ್ ಪ್ಯಾಕೇಜುಗಳನ್ನು ನಿರ್ವಹಿಸಲಿದೆ. ಇದರಡಿಯಲ್ಲಿ ಕಾಶಿ, ಅಯೋಧ್ಯೆ, ಪುರಿ, ಆದಿ ಕೈಲಾಸ ಮುಂತಾದ ಧಾರ್ಮಿಕ ಮತ್ತು ಐತಿಹಾಸಿಕ ತಾಣಗಳಿಗೆ ಪ್ರವಾಸಿಗರನ್ನು ಅದು ಕರೆದೊಯ್ಯಲಿದೆ.
ಜೊತೆಗೆ ದುಬೈ, ಸಿಂಗಾಪುರ್, ವಿಯಟ್ನಾಂ, ಶ್ರೀಲಂಕಾ, ನೇಪಾಳ, ಥಾಯ್ಲೆಂಡ್ ಮತ್ತು ಯೂರೋಪಿನ ಹಲವು ದೇಶಗಳಿಗೂ ಎಂಎಸ್ಐಎಲ್ ಟೂರ್ ಪ್ಯಾಕೇಜುಗಳನ್ನು ರೂಪಿಸಿದೆ. ಈ ಪ್ರವಾಸಗಳಿಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಸಾರ್ವಜನಿಕರು ಮಾಹಿತಿ ಪಡೆದುಕೊಳ್ಳಬಹುದು.
ಪ್ರವಾಸಿಗರ ಅನುಕೂಲಕ್ಕೆ ಎಂಎಸ್ಐಎಲ್ 24/7 ಸಹಾಯವಾಣಿ ಮತ್ತು ವಾಟ್ಸ್ಯಾಪ್ ಸೌಲಭ್ಯವನ್ನೂ (080-45888882, 9353645921) ಹೊಂದಿದೆ. ಇದರ ನಿರ್ವಹಣೆಗಾಗಿ ಪ್ರತ್ಯೇಕ ತಂಡವೇ ಇರಲಿದೆ. ಒಂದು ನಂಬರಿನಲ್ಲಿ ಯಾರಾದರೂ ಮಾತನಾಡುತ್ತಿದ್ದರೆ, ಅದು ತಾನಾಗಿಯೇ ಮತ್ತೊಂದು ಸಂಖ್ಯೆಗೆ ಸಂಪರ್ಕ ಕಲ್ಪಿಸುವ ಕ್ಲೌಡ್ ಬೇಸ್ಡ್ ಟೆಲಿಕಾಂ ಸಿಸ್ಟಮ್ ಅನ್ನು ಅಳವಡಿಸಿಕೊಳ್ಳಲಾಗಿದೆ.
ದ್ವಾರಕಾ,ನಾಗೇಷ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ಯಾತ್ರೆಗೆ 15,000 ಸಹಾಯಧನ,ನಿಮ್ಮ ಬುಕ್ಕಿಂಗ್ ಹೀಗೆ ಮಾಡಿ-Subsidy for Dwaraka
ಕಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ - ಭಾರತ್ ಗೌರವ್ ದ್ವಾರಕಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ.
ಈ ಪ್ಯಾಕೇಜ್ಗೆ ಒಟ್ಟು ₹30,000 ತಗುಲಲಿದ್ದು, ಈ ಪೈಕಿ ರಾಜ್ಯ ಸರ್ಕಾರದ ವತಿಯಿಂದ ಅಂದಾಜು ₹15,000 ಮೊತ್ತವನ್ನು ಭರಿಸಲಾಗುತ್ತದೆ.
ಯಾತ್ರಾರ್ಥಿಗಳು ಬುಕ್ಕಿಂಗ್ ಮೊತ್ತವಾಗಿ ₹15,000 ಅನ್ನು ಮಾತ್ರ ಪಾವತಿಸಬೇಕಾಗುತ್ತದೆ.
ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ
ಸೌಲಭ್ಯಗಳು
• ಪ್ಯಾಕೇಜ್ನಲ್ಲಿ 3 ಟೈರ್ ಎ.ಸಿ. ರೈಲಿನಲ್ಲಿ ಪ್ರಯಾಣ, ಊಟ, ವಸತಿ, ಸ್ಥಳೀಯ ಸಾರಿಗೆ ಮತ್ತು ದರ್ಶನದ ವ್ಯವಸ್ಥೆ
• ಪ್ರಯಾಣಿಸುವಾಗ ಆಧುನಿಕ ಪ್ಯಾ೦ಟ್ರಿ ಕಾರಿನಲ್ಲಿ ತೆಯಾರಿಸಿದ ತಾಜಾ ಸ್ಥಳೀಯ ಆಹಾರವನ್ನು ನೀಡಲಾಗುವುದು
• ಯಾತ್ರಾರ್ಥಿಗಳ ಆರೋಗ್ಯದ ದೃಷ್ಟಿಯಿ೦ದ ವೈದ್ಯಕೀಯ ಸಹಾಯ ವ್ಯವಸ್ಥೆ
ರೈಲು ಹತ್ತುವ ಹಾಗೂ ಇಳಿಯುವ ಸ್ಥಳಗಳು
ಬೆಂಗಳೂರು (SMVT), ತುಮಕೂರು, ಅರಸಿಕೆರೆ, ಬೀರೂರು, ದಾವಣಗೆರೆ, ಹಾವೇರಿ, ಬೆಳಗಾವಿ
ದ್ವಾರಕಾ ಯಾತ್ರೆ ತೆರಳಲು ಇಚ್ಛಿಸಿದ್ದಲ್ಲಿ ದಾಖಲೆಗಳೊಂದಿಗೆ ಆಯುಕ್ತರ ಕಚೇರಿಗೆ ನೇರವಾಗಿ ಸೆಪ್ಟೆಂಬರ್ 20ರ ಒಳಗಾಗಿ ಮನವಿ ಸಲ್ಲಿಸಬಹುದಾಗಿದೆ.
ಬುಕ್ಕಿಂಗ್ಗಾಗಿ https://www.irctctourism.com/Karnatakbgaurav?searchKey=&tagType=&travelType=Domestic§or=All&bdar=6
ವೆಬ್ಸೈಟ್ಗೆ ಭೇಟಿ ನೀಡಬಹುದು. ಅಥವಾ
]]>
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ
“ಜನವರಿ 1 ಅನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಮೃತಪಟ್ಟವರ ಹೆಸರು ತೆಗೆಯುವುದು, ವರ್ಗಾವಣೆ, ತಿದ್ದುಪಡಿ, ವಿಳಾಸ ಬದಲಾವಣೆಗೆ ಅವಕಾಶ ಮಾಡಿಕೊಡಲಾಗಿದೆ. ಇದಕ್ಕಾಗಿ ಏಪ್ರಿಲ್ 1, ಜುಲೈ 1, ಅಕ್ಟೋಬರ್ 1ರಂದು ನಿರ್ದಿಷ್ಟ ದಾಖಲೆಗಳೊ೦ದಿಗೆ ಅರ್ಜಿ ಸಲ್ಲಿಸಬಹುದಾಗಿದೆ.”
.
Voter ID-ನಿಮ್ಮ ಮೊಬೈಲ್ ನಲ್ಲೇ ಬದಲಾದ ಮೊಟರ್ ಐಡಿ ಡೌನ್ಲೊಡ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-205
Voter list-ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ceo.karnataka.gov.in/draftroll_2023/
ನಂತರ ನಿಮ್ಮ ಜಿಲ್ಲೆಯನ್ನು ಕ್ಲಿಕ್ ಮಾಡಿ
ನಂತರ ನೀವು ಮತ ಹಾಕುವ ಬೂತ ಮೇಲೆ ಕ್ಲಿಕ್ ಮಾಡಿ
ಕೆಳಗೆ ಕಾಣುವ captch ಮೇಲೆ ಕ್ಲಿಕ್ ಮಾಡಿ Download ಮೇಲೆ ಕ್ಲಿಕ್ ಮಾಡಿದರೆ,ನಿಮ್ಮ ಬೂತನಲ್ಲಿರುವ ಎಲ್ಲಾ ಮತದಾರರ ಪಟ್ಟಿ ಸಿಗುತ್ತದೆ. ಇದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ.
ನಿಮ್ಮ ಹೆಸರು ಇಲ್ಲದಿದ್ದರೆ ಕೂಡಲೆ ನಿಮ್ಮ ಗ್ರಾಮ ಲೆಕ್ಕಾಧಿಕಾರಿಯನ್ನು ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಸೇರಿಸಿ
ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs
https://krushirushi.in/contact-us
ಇಂತಿ ನಿಮ್ಮ
ಶಿವನಗೌಡ ಪಾಟೀಲ
M.Sc(ಕೃಷಿ), ಕೀಟಶಾಸ್ತ್ರ
]]>ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ ಗ್ರಾ ಪ್ರಸ್ತಕ ಸಾಲಿಗೆ ವೃತ್ತಿನಿರತ ಕುಶಲ ಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಗ್ರಾಮೀಣ ಭಾಗದ ವೃತ್ತಿನಿರತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಉಚಿತವಾಗಿ 192 ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.ಅರ್ಜಿಗಳನ್ನು ಆನ್ಲೈನ್ ವೆಬ್ಸೈಟ್ ಗೆ ಭೇಟಿ ನೀಡಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 06 ಕೊನೆಯ ದಿನವಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಗ್ರಾಮೀಣ ತರಬೇತಿ ಸಂಸ್ಥೆಯಿಂದ ಒಂದು ತಿಂಗಳ ಉಚಿತ ವಸತಿಯೊಂದಿಗೆ ಶಿಷ್ಯವೇತನ ರಹಿತ ತರಬೇತಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ ಮಹಿಳಾ ಅಭ್ಯರ್ಥಿಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಿಸಲಾಗುವುದು.
ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ನಿಯಮಿತದಿಂದ ಉಚಿತ ಹೊಲಿಗೆ ಯಂತ್ರವನ್ನು(Free sewing machine/uchitha holige yantra) ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ವರ್ಷ ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿ ಫಲಾನುಭವಿಗಳಿಗೆ ವಿವಿಧ ವಲಯಗಳಲ್ಲಿ ಸ್ವ-ಉದ್ಯೋಗ ಮಾಡಲು ಅರ್ಥಿಕವಾಗಿ ನೆರವು ನೀಡಲು ರಾಜ್ಯದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ವಿವಿಧ ನಿಗಮಗಳಿಂದ ಉಚಿತವಾಗಿ ಹೊಲಿಗೆ ಯಂತ್ರವನ್ನು (Free sewing machine scheme) ನೀಡಲು ಅರ್ಜಿ ಆಹ್ವಾನಿಸಲಾಗುತ್ತಿದ್ದು ಇದರಂತೆ ಈ ವರ್ಷವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.
1) ಹಿಂದುಳಿದ ವರ್ಗಗಳ ಬಡ ಕುಟುಂಬದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಡಿಯಲ್ಲಿ ಪ್ರಯೋಜನವನ್ನು ಪಡೆಯಲು ಅರ್ಜಿ ಸಲ್ಲಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದವರಾಗಿರಬೇಕು.
2) ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪುದೇಶದವರಿಗೆ ರೂ.1,20,000/-ಗಳ ಒಳಗಿರಬೇಕು,
3) ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು(Free sewing machine documents)
ಅರ್ಜಿ ಸಲ್ಲಿಸುವುದು ಹೇಗೆ? How to apply for free sewing machine application online)
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://sevasindhu.karnataka.gov.in/
ಅಥವಾ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಮೂಲಕ ಅರ್ಜಿ ಸಲ್ಲಿಸಿ
ಇದನ್ನೂ ಓದಿ
Bele vime-17.60 ಲಕ್ಷ ರೈತರಿಗೆ 2021 ಕೋಟಿ ಪರಿಹಾರ-ಕೃಷಿ ಸಚಿವ ಚಲುವರಾಯಸ್ವಾಮಿ, ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್-crop insurance - https://krushirushi.in/Bele-vime-crop-insurance-1689
]]>ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಬರುತ್ತಿರುವ ಎರಡು ಸಾವಿರ ರೂಪಾಯಿ 16 ನೇ ಕಂತಿನ ಹಣ ಜನವರಿ 14 ರಿಂದ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಇದುವರೆಗೆ 3.46 ಲಕ್ಷ ಕೋಟಿ ರೂಪಾಯಿಗಳನ್ನು 18 ಕಂತುಗಳಲ್ಲಿ ದೇಶದಾದ್ಯಂತದ ರೈತರಿಗೆ ವಿತರಿಸಲಾಗಿದೆ
ನಿಮಗೇಷ್ಟು ಜಮಾ ಹೀಗೆ ಚೆಕ್ ಮಾಡಿ-Pmkisan beneficiary status
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಮೊದಲು know your status ಮೇಲೆ ಕ್ಲಿಕ್ ಮಾಡಿ
ನಂತರ know your register number ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ
ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.
ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ
ನಂತರ update your details ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ
Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.
ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ
Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.
FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ ಕಾರಣ ಮತ್ತು ಪರಿಹಾರ
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
fruitspmk.gov.in ಪೋರ್ಟಲ್ ನಲ್ಲಿ |
|||
1 |
ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ |
ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು |
ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ (NIC) ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ. ಆ) ಸಮಸ್ಯಾತ್ಮಕ ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ. |
2 |
ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು |
ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ |
ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ |
3 |
ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು |
ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ |
ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ |
4 |
ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ |
ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ |
OPERATOR ಲಾಗಿನ್ (RSK, ADA office, JDA office) OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು |
5 |
01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ |
ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ |
ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ) |
6 |
Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು |
ಜಿಲ್ಲೆಗಳಲ್ಲಿ OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ |
AAO ಲಾಗಿನ್ (RSK, ADA office, JDA office) AAO ಲಾಗಿನ್ನಲ್ಲಿ ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ, ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
7 |
ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ |
ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ) |
AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ. |
8 |
PFMS rejected |
Aadhaar Number is not seeded in NPCI |
ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ |
Bank Name And IFSC Code are not related to each other |
ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ |
||
Bank Name is not as per PFMS Bank Master. |
|||
Beneficiary is rejected as Account Type is other than SB / SBA / JD |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ) |
||
Duplicate Beneficiary Name , Bank Account No and Bank Name not allowed for same scheme |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
IFSC Code either not present or currently inactive in tbl BankBranch |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
Incorrect Aadhaar Number |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
One or more mandatory tags values are missing. |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
||
Rejected by Bank, Account No does not exist in Bank/INVALID/CLOSED |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
9 |
Amount credited to Account Number-NA |
Aadhaar number based payment by GoI |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ. |
10 |
PAYMENT STOPPED BY STATE |
XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ |
ಕೇಂದ್ರ ಸರ್ಕಾರ |
11 |
Transaction failed |
ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ. |
12 |
ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ |
OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ |
ಕೇಂದ್ರ ಸರ್ಕಾರ |
13 |
ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು |
ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ. |
ಕೇಂದ್ರ ಸರ್ಕಾರ ದ pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ. |
ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ (FRUITS ID) ಪ್ರೊಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುದು.
ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.
ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು (FRUITS ID) ಪ್ರೊಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೊಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನುಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ (FRUITS ID) ಪ್ರೊಟ್ಸ್ ಐಡಿ ಸೃಜಿಸಿಕೊಳ್ಳಬಹುದು. (FRUITS ID) ಪ್ರೊಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.
ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್/Aadhaar number ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ
ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.
ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.
ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ
ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ/farmer" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು/Submit" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
ವರ್ಷದಲ್ಲಿ ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯ (ಪಿಎಂ-ಕಿಸಾನ್) ಫಲಾನುಭವಿಗಳ ಸಂಖ್ಯೆ(pmkisan 19th instalment ineligible list) ಐದು ಲಕ್ಷದಿಂದ ಆರು ಲಕ್ಷದಷ್ಟು ಕುಸಿತವಾಗಿದೆ.
ಲೋಕಸಭೆಯಲ್ಲಿ ಮೈಸೂರು ಸಂಸದ ಯದುವೀರ್ ಒಡೆಯರ್ ಮಂಗಳವಾರ ಕೇಳಿದ ಪ್ರಶ್ನೆಗೆ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್ ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ.
13ನೇ ಕಂತಿನವರೆಗೆ (2023ರ ಮಾರ್ಚ್) ರಾಜ್ಯದ ಫಲಾನುಭವಿಗಳ ಸಂಖ್ಯೆ 49 ಲಕ್ಷದಷ್ಟು ಇತ್ತು. 14ನೇ ಕಂತಿನಲ್ಲೂ ಫಲಾನುಭವಿಗಳ ಸಂಖ್ಯೆ 49.34 ಲಕ್ಷ ಆಗಿತ್ತು. 15ನೇ ಕಂತಿನಲ್ಲಿ ಈ ಸಂಖ್ಯೆ 43.78 ಲಕ್ಷಕ್ಕೆ ಕುಸಿಯಿತು. ಆ ಬಳಿಕ ಸಂಖ್ಯೆಯಲ್ಲಿ ಗಣನೀಯ ಏರಿಕೆ ಆಗಿಲ್ಲ.
ಪಿಎಂ- ಕಿಸಾನ್ ಯೋಜನೆಯಡಿ ಕೃಷಿಕರಿಗೆ ವಾರ್ಷಿಕ ₹6 ಸಾವಿರ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಈ ಮೊತ್ತವನ್ನು ₹8 ಸಾವಿರ ಅಥವಾ ₹12 ಸಾವಿರಕ್ಕೆ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
Pmkisan 19th instalment ineligible list-ಪಿಎಂ ಕಿಸಾನ್ 19ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ಪಿಎಂ ಕಿಸಾನ್ ಸಮ್ಮಾನ ನಿಧಿ 12,000 ಕ್ಕೆ ಏರಿಕೆಗೆ ಪ್ರಸ್ತಾವನೆ, ಯಾರಿಗೆಲ್ಲಾ ಸಿಗಲಿದೆ 19ನೇ ಕಂತು ಹೀಗೆ ಚೆಕ್ ಮಾಡಿ-Pmkisan 19th instalment - https://krushirushi.in/Pmkisan-19th-instalment-1731
]]>ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್(Survey number) ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.
ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ(Bele sala) ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.
FID survey number link-ಎಫ್ ಐಡಿಗೆ ಲಿಂಕ್ ಆದ ಸರ್ವೆ ನಂಬರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ,ನಿಮ್ಮ FID ಗೆ ಎಷ್ಟು ಸರ್ವೆ ನಂಬರ್ ಲಿಂಕ್ ಆಗಿದೆ ಚೆಕ್ ಮಾಡಿ - https://krushirushi.in/FID-survey-number-link-1633
ಸಾಲ(crop loan status)ವಿವರ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು
https://landrecords.karnataka.gov.in/Service2/
ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ.
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಇದನ್ನೂ ಓದಿ
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427
ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ. ಎಂಬ ಮಾಹಿತಿ ಇರುತ್ತದೆ.
ಈ ಮಾಹಿತಿ ರೈತರಿಗೆ ತುಂಬಾ ಅನುಕೂಲವಾಗಿದೆ ಸರ್ವೇ ನಂಬರ್ ನಮೂದಿಸಿದರೆ ಸಾಕು ರೈತರು ದೇಶದ ಯಾವುದೇ ಮೂಲೆಯಿಂದಲೂ ಮಾಹಿತಿ ಪಡೆಯಬಹುದು. ಕೇವಲ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವ ಮಾಹಿತಿ ಎಲ್ಲವೂ ರೈತರಿಗೆ ಸಿಗಲಿದೆ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಯೋಜನೆಗಳ ಪಟ್ಟಿ ದೊರೆಯಲಿದೆ, ಅದರಲ್ಲಿ ನಿಮಗೆ ಬೇಕಾದ ಯೋಜನೆಯ ಮೇಲೆ ಕ್ಲಿಕ್ ಮಾಡಿ
ಉದಾಹರಣೆಗೆ ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿ(Gruhalakahmi)
ಈ ಕೆಳಗಿನಂತೆ ಇಲ್ಲಿಯವರೆಗೂ ಹಣ ಜಮಾ ಆಗಿರುವ ಮಾಹಿತಿ ತೋರಿಸುತ್ತದೆ.
2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಹೊಸ ಸದಸ್ಯರ ನೋಂದಣಿಗೆ ಅವಕಾಶ ನೀಡಲಾಗಿದೆ.
ದಿನಾಂಕ 1/1/2024 ರಿಂದ ಯಶಸ್ವಿನಿ ನೊಂದಣೆ ಆರಂಭಗೊಂಡಿದ್ದು ದಿನಾಂಕ 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ.
ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತರ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ. 100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.
ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬAಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.
ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ನೆಟ್ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್ಡಿ ನಂಬರ್ ತರುವುದು ಕಡ್ಡಾಯವಾಗಿದೆ.
ಈ ಕೆಳಕಂಡ ಸೌಲಭ್ಯಗಳನ್ನು ಯಶಸ್ಮಿನಿ ಸದಸ್ಯರಿಗೆ ಒದಗಿಸಲಾಗುವುದು.
ಎ) ಪ್ರಸ್ತುತ ಯಶಸ್ಸಿನಿ ಯೋಜನೆಯಡಿಯಲ್ಲಿ ಟ್ರಸ್ಟ್ ಗುರ್ತಿಸಿದ 1650 ವಿವಿಧ ಚಿಕಿತ್ಸೆಗಳು ಮತ್ತು 478 ICU ಚಿಕಿತ್ಸೆಗಳೂ ಸೇರಿದಂತೆ ಒಟ್ಟು 2128 ಚಿಕಿತ್ಸೆಗಳನ್ನು ಅಳವಡಿಸಿಕೊಳ್ಳಲಾಗಿದೆ.
ಬಿ) ರೋಗಿಗಳಿಗೆ ಸದರಿ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದಲ್ಲಿ ನೋಂದಾಯಿಸಿದ ಯಶಸ್ಸಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಒದಗಿಸಲಾಗುವುದು. ನೆಟ್ವರ್ಕ್ ಆಸ್ಪತ್ರೆಗಳನ್ನು ಹೊರತುವಡಿಸಿ ಇತರೆ ಆಸ್ಪತ್ರೆಗಳಲ್ಲಿ ಯಶಸ್ವಿನಿ ಯೋಜನೆಯ ಸೇವೆ ಲಭ್ಯವಿರುವುದಿಲ್ಲ. ಯಶಸ್ಸಿನಿ ಯೋಜನೆಯಡಿ ಫಲಾನುಭವಿ ಚಿಕಿತ್ಸೆ ಪಡೆಯುವ ಮೊದಲು ಆಸ್ಪತ್ರೆಯು ಯೋಜನೆಗೆ ಒಳಪಟ್ಟಿರುವ ಬಗ್ಗೆ, ಖಾತ್ರಿ ಪಡಿಸಿಕೊಂಡು ನಂತರ ಚಿಕಿತ್ಸೆ ಪಡೆಯತಕ್ಕದ್ದು.
ಸಿ) ಯೋಜನೆಯಲ್ಲಿ ಒಳವಡದ ಚಿಕಿತ್ಸೆಗಳ ಮತ್ತು ಟ್ರಸ್ಟ್ ಅಂಗೀಕರಿಸದ ಆಸ್ಪತ್ರೆಗಳಲ್ಲಿ ಪಡೆದಂತಹ ಚಿಕಿತ್ಸೆಗಳಿಗೆ ಯಶಸ್ವಿನಿ ಟ್ರಸ್ಟ್ ಜವಾಬ್ದಾರರಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಆಸ್ಪತ್ರೆಗಳಿಗಾಗಲಿ ಅಥವಾ ಫಲಾನುಭವಿಗಳಿಗಾಗಲಿ ಚಿಕಿತ್ಸಾ ವೆಚ್ಚವನ್ನು ಪಾವತಿಸಲಾಗುವುದಿಲ್ಲ.
ಡಿ) ಎರಡು ಜೀವಂತ ಮಕ್ಕಳು ಅಥವಾ ಎರಡು ಹೆರಿಗೆಗೆ ಮಾತ್ರ ಯಶಸ್ವಿನಿ ಯೋಜನೆಯಲ್ಲಿ ಸೌಲಭ್ಯ ದೊರೆಯುತ್ತದೆ.
ಇ) ಯಶಸ್ವಿನಿ ಯೋಜನೆಯ ಪ್ರೋಟೋಕಾಲ್ ಪ್ರಕಾರ ಯಶಸ್ವಿನಿ ಫಲಾನುಭವಿಗಳು ಜನರಲ್ ವಾರ್ಡನಲ್ಲಿ ಮಾತ್ರ ಚಿಕಿತ್ಸೆ ವಡೆಯಲು ಅರ್ಹರಿರುತ್ತಾರೆ. ಒಂದು ವೇಳೆ ಯೋಜನೆಯಡಿ ನಿಗದಿಪಡಿಸಿರುವ ಜನರಲ್ ವಾರ್ಡ್ ಬದಲಾಗಿ ಉನ್ನತ(Semi Special Ward Or Special Ward)ನಲ್ಲಿ ಚಿಕಿತ್ಸೆ ಪಡೆಯಲು ಇಚ್ಚಿಸಿದಲ್ಲಿ ಸದರಿ ಫಲಾನುಭವಿಗಳಿಗೆ ಯೋಜನೆಯಡಿ ನಿಗದಿ ಪಡಿಸಿರುವಂತೆ ಜನರಲ್ ವಾರ್ಡಗೆ ಅನ್ವಯಿಸುವ ಚಿಕಿತ್ಸೆಯ ವೆಚ್ಚವನ್ನು ಮಾತ್ರ ಭರಿಸಲಾಗುವುದು. ಉನ್ನತ ವಾರ್ಡ್/ಸ್ಪೆಷಲ್ ವಾರ್ಡಿಗೆ ಆಗುವ ಹೆಚ್ಚುವರಿ ವ್ಯತ್ಯಾಸದ ಚಿಕಿತ್ಸಾ ಮೊತ್ತವನ್ನುಸದರಿ ಫಲಾನುಭವಿಗಳೇ ಭರಿಸತಕ್ಕದ್ದು.
ಎಫ್) ಯಶಸ್ವಿನಿ ಯೋಜನೆಯ ವ್ಯಾಕೇಜಿನಲ್ಲಿ Implants ಅಗತ್ಯವಿರುವ ಕಡೆ Implants ơ. (Ex. Knee replacement, Lens in cataract Surgery) ವೇಳೆ ಫಲಾನುಭವಿಗಳು ಉನ್ನತ Implants ಅಥವಾ Lens ನಡೆಯಲು ಸ್ವ ಇಚ್ಛೆಯಿಂದ ಒಪ್ಪಿಗೆ ಸೂಚಿಸಿದ್ದಲ್ಲಿ, ಅಂತಹ ಉನ್ನತ Implants ಮತ್ತು Lens ಗೆ ತಗಲುವ ವ್ಯತ್ಯಾಸದ ಹೆಚ್ಚುವರಿ ಮೊತ್ತವನ್ನು ಅಂತ ಫಲಾನುಭವಿಗಳೇ ಭರಿಸಿ ಚಿಕಿತ್ಸೆಯನ್ನು ವಡೆಯತಕ್ಕದ್ದು.
ಜಿ) ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಯಶಸ್ಸಿನಿ ಸದಸ್ಯರಿಗೆ ಹೊರ ರೋಗಿ ಚಿಕಿತ್ಸೆಗೆ (OPD) ಗರಿಷ್ಠ ರೂ.200/-ಗಳನ್ನು (ಮೂರು ತಿಂಗಳ ಅವಧಿಗೆ) ಮಿತಿ ನಿಗಧಿಪಡಿಸಿದ್ದು, ಈ ಪೈಕಿ ರೂ.100/- ಗಳನ್ನು ಯಶಸ್ವಿನಿ ಟ್ರಸ್ಟ್ ವತಿಯಿಂದ ವಾವತಿಸಲಾಗುವುದು.
17. ಸದಸ್ಯರ ನೋಂದಣಿಗೆ ಮಾರ್ಗಸೂಚಿಗಳು, ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳ ಯಾದಿ, ಶಸ್ತ್ರಚಿಕಿತ್ಸೆಗಳ ಯಾದಿ ಇವುಗಳನ್ನು ಸಹಕಾರ ಇಲಾಖೆಯ ಸಹಕಾರ ಸಿಂಧು ವೆಬ್ಸೈಟ್ನಲ್ಲಿ/ಟ್ರಸ್ಟ ವೆಬ್ಸೈಟ್ನಲ್ಲೂ ಅಪ್ಲೋಡ್ ಮಾಡಲಾಗುವುದು.
18. ಸದಸ್ಯರು ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಒದಗಿಸತಕ್ಕದು.
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698
]]>2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನಾಧಾರಿತ ಬೆಳೆವಿಮೆ(WBCIS)ಯೋಜನೆಯಡಿ ಜಿಲ್ಲೆಯ 3584 ರೈತರಿಗೆ ರೂ.2333.01 ಲಕ್ಷ ವಿಮಾ ಮೊತ್ತವನ್ನು ಕ್ಷೇಮಾ ಇನ್ಸುರೆನ್ಸ್ ಕಂಪನಿಯರು ವಿಮಾದಾರರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698
ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನಧಾರಿತ ಬೆಳೆವಿಮೆ(WBCIS) ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಅಡಿಕೆ, ಮಾವು ಮತ್ತು ದಾಳಿಂಬೆ ಬೆಳೆಗೆ ಜಿಲ್ಲೆಯ 3648 ರೈತರು ರೂ.226.99 ಲಕ್ಷ ಪ್ರೀಮಿಯಂ ಪಾವತಿಸಿ ನೋಂದಾಯಿಸಿಕೊಂಡಿದ್ದು, ಈ ಪೈಕಿ 3584 ರೈತರಿಗೆ ರೂ.2333.01 ಲಕ್ಷ ವಿಮಾ ಮೊತ್ತವನ್ನು ಕ್ಷೇಮಾ ಇನ್ಸುರೆನ್ಸ್ ಕಂಪನಿಯರು ಜಿಲ್ಲೆ ಎಲ್ಲಾ ವಿಮಾದಾರರ ಖಾತೆಗೆ ಬಿಡುಗಡೆ ಮಾಡಿರುತ್ತಾರೆ. ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಸಹಕರಿಸಿದ ಜಿಲ್ಲೆಯ ಎಲ್ಲ ರೈತರಿಗೆ ಅಭಿನಂದನೆ ಸಲ್ಲಿಸುತ್ತಾ, ಮುಂದಿನ ದಿನಗಳಲ್ಲಿ ಈ ಯೋಜನೆ ಅನುಷ್ಟಾನ ಮಾಡಲು ಸಹಕರಿಸಲು ಕೋರಿದ್ದಾರೆ.
ಮುಂದಿನ ವರ್ಷಗಳಲ್ಲಿ ಈ ಯೋಜನೆಯಡಿ ನೋಂದಾಯಿಸಿಕೊಳ್ಳುವ ರೈತರು ಯೋಜನೆಯ ಸದುಪಯೋಗ ಪಡೆಯಲು ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಕಡ್ಡಾಯವಾಗಿ ಬೆಳೆಯನ್ನು ಇಂದೀಕರಿಸಬೇಕು ಹಾಗೂ ಹಿಂದಿನ 2 ವರ್ಷಗಳಲ್ಲಿ ಬೆಳೆ ಸಮೀಕ್ಷೆ (Crop survey)ತಂತ್ರಾಂಶದಲ್ಲಿ ಕಡ್ಡಾಯವಾಗಿ ಬೆಳೆಯನ್ನು ನೊಂದಾಯಿಸಿಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
ಪಿಎಂ ಕುಸುಮ್ ಯೋಜನೆಯಡಿ ಜಾಲಮುಕ್ತ ಸೌರ ಚಾಲಿತ ಕೃಷಿ ಪಂಪ್ಸೆಟ್ಗಳಿಗಾಗಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದೆ. ಕೇಂದ್ರ ಸರ್ಕಾರದ ಪಿಎಂ ಕುಸುಮ್ ಯೋಜನೆಯಡಿ ಜಾಲಮುಕ್ತ ಸೌರ ಶಕ್ತಿ ಚಾಲಿತ ಪಂಪ್ಸೆಟ್ಗಳನ್ನು ಅಳವಡಿಸಿಕೊಳ್ಳಲು ರೈತರು ಅರ್ಜಿ ಹಾಕಬಹುದು.
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698
ಅರ್ಜಿಯನ್ನು ಕೆ. ಆರ್. ಇ. ಡಿ. ಎಲ್. ಅಧಿಕೃತ ಜಾಲತಾಣದ ಮೂಲಕ ಹಾಕಬಹುದು.
2023-24ನೇ ಸಾಲಿನ ನೂತನ ಯೋಜನೆಯಡಿ ಸೋಲಾರ್ ಪಂಪ್ಸೆಟ್ ಅಳವಡಿಕೆಗೆ ಹಾಗೂ ಯಂತ್ರೋಪಕರಣಗಳ ಖರೀದಿಗೆ ಉತ್ತಮ ಸಬ್ಸಿಡಿ ದೊರೆಯಲಿದೆ. ಯಂತ್ರೋಪಕರಣಗಳ ಖರೀದಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶೇಕಡಾ 50 ರಷ್ಟು ಸಹಾಯಧನ ದೊರೆಯಲಿದೆ. ಇತರೆ ವರ್ಗದವರಿಗೆ ಶೇಕಡಾ 40 ರಷ್ಟು ಸಬ್ಸಿಡಿ ದೊರೆಯಲಿದೆ.
ಇನ್ನು ಸೋಲಾರ್ ಆಧರಿತ 3 ಹೆಚ್ಪಿ ಸೋಲಾರ್ ಪಂಪ್ಸೆಟ್ಗಳಿಗೆ 2 ಲಕ್ಷವಾದರೆ ಶೇಕಡಾ 50ರಂತೆ ಒಂದು ಲಕ್ಷ ರೂಪಾಯಿ ಸಹಾಯಧನ ಸಿಗಲಿದೆ. ನ್ನು 3 ಹೆಚ್ಪಿ ಸೋಲಾರ್ ಗಿಂತ ಮೇಲ್ಪಟ್ಟ ಸೋಲಾರ್ ಪಂಪ್ಸೆಟ್ಗಳಿಗೆ 3 ಲಕ್ಷ ಖರ್ಚಿಗೆ 1.5ಲಕ್ಷ ರೂಪಾಯಿ ಸಹಾಯಧನ ದೊರೆಯಲಿದೆ. ರೈತರು ಅಧಿಕೃತ ಸಂಸ್ಥೆಯಿಂದ ಮಾತ್ರ ಸೋಲಾರ್ ಪಂಪ್ಸೆಟ್ ಖರೀದಿಸಿರಬೇಕು.
ರೈತರು ಅಧಿಕೃತ ಸಂಸ್ಥೆಯಿಂದ ಮಾತ್ರ ಸೋಲಾರ್ ಪಂಪ್ಸೆಟ್ ಖರೀದಿಸಿರಬೇಕು. ಅರ್ಜಿ ಸಲ್ಲಿಸಲು ಅರ್ಹ ರೈತರು ಸ್ಥಳೀಯ ತಾಲೂಕಿನ ತೋಟಗಾರಿಕಾ ಇಲಾಖೆ ಕಚೇರಿಯನ್ನು ಸಂಪರ್ಕಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ಬುಕ್ ಪ್ರತಿ, ಎಫ್ಐಡಿ ಸಂಖ್ಯೆ, ಆರ್ಟಿಸಿ, ಫೋಟೋ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅರ್ಜಿ ಸಲ್ಲಿಕೆಗೆ ಕಡ್ಡಾಯವಾಗಿರುತ್ತದೆ.
ನೋಂದಣಿ ಹೇಗೆ?
ರೈತರು ತಮ್ಮ ಆಧಾರ್, ಆರ್ಟಿಸಿ ಮತ್ತು ಬ್ಯಾಂಕ್ ವಿವರಗಳೊಂದಿಗೆ ಆನ್ಸೆನ್ ಪೋರ್ಟಲ್ https://souramitra.com ನೋಂದಾಯಿಸಿಕೊಳ್ಳಬಹುದು.
ರೈತರ ನೋಂದಣಿ ಸಮಸ್ಯೆ ಪರಿಹರಿಸಲು ಕ್ರೆಡಲ್ನಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದ್ದು ದೂರವಾಣಿ ಸಂಖ್ಯೆ 080-22202100 ಸಂಪರ್ಕಿಸಲು ಕೋರಿದೆ
PM Surya Ghar Yojana 2024-ಪಿಎಂ ಸೂರ್ಯಘರ್ ಯೋಜನೆಯಡಿ 300 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
"PM Surya Ghar Yojana" ಈ ಯೋಜನೆಯಡಿ ಸರ್ಕಾರ ಜನರಿಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲು ಯೋಜನೆ ರೂಪಿಸುತ್ತಿದೆ, ಇದಕ್ಕಾಗಿ ನಿಜವಾದ ಸಬ್ಸಿಡಿಯನ್ನು ನೀಡಲಾಗುವುದು ಅದನ್ನು ನೇರವಾಗಿ ಜನರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು ಎನ್ನಲಾಗಿದೆ.
75,000 ಕೋಟಿಗೂ ಹೆಚ್ಚು ಹೂಡಿಕೆಯೊಂದಿಗೆ ಈ ಯೋಜನೆಯು ಪ್ರತಿ ತಿಂಗಳು 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಅನ್ನು ಒದಗಿಸುವ ಮೂಲಕ 1 ಕೋಟಿ ಮನೆಗಳನ್ನು ಬೆಳಗಿಸುವ ಗುರಿಯನ್ನು ಹೊಂದಿದೆ.
ಕಳೆದ ತಿಂಗಳು (ಜನವರಿ) ಪ್ರಧಾನಿ ಮೋದಿ ಅವರು ಪಿಎಂ ಸೂರ್ಯೋದಯ ಯೋಜನೆಯನ್ನು ಅನಾವರಣಗೊಳಿಸಿದರು. ಮನೆಗಳ ಮೇಲ್ಛಾವಣಿಯಲ್ಲಿ ಸೌರಫಲಕಗಳನ್ನು ಅಳವಡಿಸುವ ದೊಡ್ಡ ಯೋಜನೆ ಅದು. ಅದರ ಭಾಗವಾಗಿ ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆ ಚಾಲನೆಗೆ ತರಲಾಗಿದೆ. ಒಂದು ಮನೆಗೆ ಪ್ರತೀ ತಿಂಗಳು 300 ಯೂನಿಟ್ಗಳಷ್ಟು ಉಚಿತ ವಿದ್ಯುತ್ ಒದಗಿಸುವ ಒಂದು ಯೋಜನೆ ಇದು. ಈ ರೀತಿ ದೇಶಾದ್ಯಂತ ಒಂದು ಕೋಟಿ ಮನೆಗಳಿಗೆ ಈ ಯೋಜನೆ ತಲುಪಿಸುವ ಗುರಿಯನ್ನು ಕೇಂದ್ರ ಸರ್ಕಾರ ಇಟ್ಟುಕೊಂಡಿದೆ.
ಆರಂಭದಲ್ಲಿ ಒಂದು ವಿಷಯ ಸ್ಪಷ್ಟಪಡಿಸಬೇಕಿದೆ. 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದರೂ ಇದು ಉಚಿತವಲ್ಲ. ಮನೆ ಛಾವಣಿ ಮೇಲೆ ಸೌರ ಯೂನಿಟ್ಗಳನ್ನು ಸ್ಥಾಪಿಸಲು ಹಣ ವ್ಯಯಿಸಬೇಕು. ಆದರೆ, ಇದಕ್ಕೆ ಸರ್ಕಾರ ಸಬ್ಸಿಡಿ ಕೊಡುತ್ತದೆ. ಬಜೆಟ್ನಲ್ಲಿ ಈ ಯೋಜನೆಗೆ 75,000 ಕೋಟಿ ರೂ ಹಣವನ್ನು ಸರ್ಕಾರ ತೆಗೆದಿರಿಸಿದೆ. ಬ್ಯಾಂಕ್ನಿಂದಲೂ ಕಡಿಮೆ ಬಡ್ಡಿದರದಲ್ಲಿ ಸಾಲದ ವ್ಯವಸ್ಥೆ ಸಿಗುತ್ತದೆ. ಹೀಗಾಗಿ, ಈ ಯೋಜನೆ ಪಡೆಯುವವರಿಗೆ ಹೆಚ್ಚುವರಿ ಹೊರೆ ಬೀಳುವುದಿಲ್ಲ. ಇವರು ಮಾಡುವ ವೆಚ್ಚ ಒಂದರಿಂದ ಎರಡು ವರ್ಷದಲ್ಲಿ ಸರಿದೂಗುತ್ತದೆ.
ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸುವ ಕ್ರಮ
ಪಿಎಂ ಸೂರ್ಯ ಘರ್ ಯೋಜನೆಗೆಂದು ಪೋರ್ಟಲ್ ಸಿದ್ಧಪಡಿಸಲಾಗಿದೆ. ಅಲ್ಲಿ ನೊಂದಾಯಿಸಿಕೊಳ್ಳಬೇಕು. ಅದರ ಲಿಂಕ್ ಇಲ್ಲಿದೆ: www.pmsuryaghar.gov.in
ನಂತರ Apply for rooftop solar ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಡಿಸ್ಕಾಂ ಕಂಪನಿ ಆಯ್ಕೆ ಮಾಡಿ
ನಂತರ ವಿದ್ಯುತ್ ಬಿಲ್ನ ಕನ್ಸೂಮರ್ ನಂಬರ್, ಮೊಬೈಲ್ ನಂಬರ್ ಮತ್ತು ಇಮೇಲ್ ನಮೂದಿಸಿ,Captcha code ಹಾಕಿ Submit ಮೇಲೆ ಕ್ಲಿಕ್ ಮಾಡಿ
Register ಆದ ನಂತರ ಕನ್ಸೂಮರ್ ನಂಬರ್ ಮತ್ತು ಮೊಬೈಲ್ ನಂಬರ್ ಬಳಸಿ ಲಾಗಿನ್ ಆಗಿರಿ.
ಲಾಗಿನ್ ಆದ ಬಳಿಕ ರೂಫ್ಟಾಪ್ ಸೋಲಾರ್ ಅಪ್ಲಿಕೇಶನ್ ಫಾರ್ಮ್ ಅನ್ನು ಭರ್ತಿ ಮಾಡಿ ಸಲ್ಲಿಸಬೇಕು.
ಇದಕ್ಕೆ ಅನುಮೋದನೆ ಸಿಗುವವರೆಗೂ ಕಾಯಬೇಕು. ಅನುಮೋದನೆ ದೊರೆತ ಬಳಿಕ ನೊಂದಾಯಿತ ಮಾರಾಟಗಾರರು ನಿಮ್ಮ ಮನೆಗೆ ಬಂದು ಸೌರ ಘಟಕವನ್ನು ಸ್ಥಾಪಿಸುತ್ತಾರೆ.
ಇದಾದ ಬಳಿಕ ನೆಟ್ ಮೀಟರ್ಗೆ ಅರ್ಜಿ ಸಲ್ಲಿಸಬೇಕು.
ನೆಟ್ ಮೀಟರ್ ಇನ್ಸ್ಟಾಲ್ ಆಗಿ ಡಿಸ್ಕಾಂ ಅಧಿಕಾರಿಗಳಿಂದ ಪರಿಶೀಲನೆ ಆದ ಬಳಿಕ ಕಮಿಷನಿಂಗ್ ಸರ್ಟಿಫಿಕೇಟ್ ಸಿಗುತ್ತದೆ.
ಬಳಿಕ ಪಿಎಂ ಸೂರ್ಯಘರ್ ಪೋರ್ಟಲ್ಗೆ ಹೋಗಿ ಮತ್ತೆ ಲಾಗಿನ್ ಆಗಿ, ನಿಮ್ಮ ಬ್ಯಾಂಕ್ ಖಾತೆ ವಿವರ ನೀಡಿ. ಕ್ಯಾನ್ಸಲ್ ಮಾಡಿದ ಚೆಕ್ನ ಸ್ಕ್ಯಾನ್ಡ್ ಕಾಪಿಯನ್ನು ಅಪ್ಲೋಡ್ ಮಾಡಿ. ಇದು ಕೊನೆಯ ಪ್ರಕ್ರಿಯೆ. ಇದು ಮುಗಿದ ಬಳಿಕ 30 ದಿನದೊಳಗೆ ನಿಮ್ಮ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಸಬ್ಸಿಡಿ ಹಣ ಬಂದು ಸೇರುತ್ತದೆ.
ಕೋವಿಡ್ ವೈರಾಣು ಜಗತ್ತನ್ನು ಕಾಡಿದ 5 ವರ್ಷಗಳ ನಂತರ ಈಗ ಚೀನಾದಲ್ಲಿ ಮತ್ತೊಂದು ನಿಗೂಢ ವೈರಾಣು ಎದುರಾಗಿದ್ದು ಆತಂಕ ಹೆಚ್ಚಿಸಿದೆ.
ಹ್ಯೂಮನ್ ಮೆಟಾಪ್ನ್ಯೂಮೊವೈರಸ್ (human metapneumovirus or HMPV) ಈ ಬಾರಿ ಚೀನಾದಲ್ಲಿ ಕಾಣಿಸಿಕೊಂಡಿರುವ ಹೊಸ ವೈರಾಣು ಆಗಿದ್ದು, ನೆರೆಯ ರಾಷ್ಟ್ರ ಮತ್ತೊಮ್ಮೆ ಹೊಸ ವೈರಾಣುವಿನಿಂದ ಪಾರಾಗಲು ಸ್ಕ್ರೀನಿಂಗ್, ಪತ್ತೆ ಮತ್ತು ಪ್ರತ್ಯೇಕತೆಯ ಪ್ರೋಟೋಕಾಲ್ಗಳ ಮೊರೆ ಹೋಗಿದೆ.
ಚೀನಾದಲ್ಲಿ HMPVಯ ವೈರಾಣು ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು ವಿಶೇಷವಾಗಿ ಉತ್ತರ ಪ್ರಾಂತ್ಯಗಳಲ್ಲಿ 14 ವರ್ಷದೊಳಗಿನವರನ್ನು ಈ ವೈರಾಣು ಹೆಚ್ಚು ಬಾಧಿಸುತ್ತಿದೆ ಎಂದು ಅಧಿಕಾರಿಗಳು ಹೇಳಿರುವುದನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.
COVID ಮಾದರಿಯ ಸ್ಥಿತಿ ಎದುರಾಗದಂತೆ ತಡೆಗಟ್ಟಲು ಚೀನಾ ಸರ್ಕಾರ ಅಜ್ಞಾತ ವೈರಸ್ ನ್ನು ನಿಭಾಯಿಸಲು ಮೇಲ್ವಿಚಾರಣಾ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ನಡೆಸುತ್ತಿದೆ.
ರಾಯಿಟರ್ಸ್ ಪ್ರಕಾರ, ಚೀನಾದಲ್ಲಿ ಎಚ್ಎಂಪಿವಿ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ ಮತ್ತು ರೈನೋವೈರಸ್ನಂತಹ ಇತರ ಸಾಂಕ್ರಾಮಿಕ ರೋಗಗಳನ್ನು ಹರಡುವ ಅಪಾಯದಲ್ಲಿದೆ.
COVID ಮಾದರಿಯ ಸ್ಥಿತಿ ಎದುರಾಗದಂತೆ ತಡೆಗಟ್ಟಲು ಚೀನಾ ಸರ್ಕಾರ ಅಜ್ಞಾತ ವೈರಸ್ ನ್ನು ನಿಭಾಯಿಸಲು ಮೇಲ್ವಿಚಾರಣಾ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ನಡೆಸುತ್ತಿದೆ.
ಹೊಸ ವೈರಸ್ ಬಗ್ಗೆ ಎಲ್ಲಾ ವಿವರಗಳು ಇಲ್ಲಿವೆ
ವೈರಸ್ ಎಲ್ಲಾ ವಯಸ್ಸಿನ ಜನರಲ್ಲಿ ಉಸಿರಾಟದ ಕಾಯಿಲೆಗಳನ್ನು ಉಂಟುಮಾಡಬಹುದು. ಆದಾಗ್ಯೂ, ಚಿಕ್ಕ ಮಕ್ಕಳು, ಹಿರಿಯ ವಯಸ್ಕರು ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಜನರು ವಿಶೇಷವಾಗಿ ಈ ರೋಗಕ್ಕೆ ಬೇಗ ಗುರಿಯಾಗುತ್ತಾರೆ. HMPV ವೈರಾಣುವನ್ನು 2001 ರಲ್ಲಿ ಮೊದಲ ಬಾರಿಗೆ ಪತ್ತೆ ಮಾಡಲಾಗಿತ್ತು.
ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಪ್ರಕಾರ, ವೈರಸ್ ರೋಗಲಕ್ಷಣಗಳು ಚಳಿಗಾಲದಲ್ಲಿ ಸಾಮಾನ್ಯವಾದ ಇತರ ವೈರಲ್ ಸೋಂಕುಗಳಂತೆಯೇ ಇರುತ್ತವೆ.
HMPV virus in China
HMPV ವೈರಸ್ನ ಪ್ರಮುಖ ಲಕ್ಷಣಗಳು ಇಲ್ಲಿವೆ.
ಕೆಮ್ಮು, ಜ್ವರ, ಮೂಗು ಕಟ್ಟುವಿಕೆ, ಉಸಿರಾಟದ ತೊಂದರೆ.
ಸೋಂಕಿನ ಕ್ಲಿನಿಕಲ್ ರೋಗಲಕ್ಷಣಗಳು ಉಲ್ಬಣಗೊಳ್ಳಬಹುದು ಮತ್ತು ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾದಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಇದು ಉಸಿರಾಟದ ಸೋಂಕುಗಳಿಗೆ ಕಾರಣವಾಗುವ ಇತರ ವೈರಸ್ಗಳಿಗೆ ಹೋಲುತ್ತದೆ.
ಸೋಂಕಿನ ಕಾವು ಅವಧಿಯು ಮೂರರಿಂದ ಆರು ದಿನಗಳಾಗಿವೆ. ಅಂದರೆ ಜನರು ಸೋಂಕಿಗೆ ಒಳಗಾದ ಮೂರರಿಂದ ಆರು ದಿನಗಳ ನಂತರ ಅದರ ರೋಗಲಕ್ಷಣಗಳನ್ನು ಎದುರಿಸುತ್ತಾರೆ.
ಅನಾರೋಗ್ಯದ ಅವಧಿಯು ಅದರ ತೀವ್ರತೆಯನ್ನು ಅವಲಂಬಿಸಿ ಬದಲಾಗಬಹುದಾಗಿದೆ.
HMPV ಸೋಂಕನ್ನು ತಡೆಯುವುದು ಹೇಗೆ?
ಮನೆಗೆ ಬಂದಾಗ ಸಾಬೂನಿನಿಂದ ಕೈ ತೊಳೆಯಿರಿ.
ತೊಳೆಯದ ಕೈಗಳಿಂದ ಕಣ್ಣು, ಮೂಗು ಅಥವಾ ಬಾಯಿಯನ್ನು ಮುಟ್ಟುವುದನ್ನು ತಪ್ಪಿಸಿ.
ಸೋಂಕಿತರೊಂದಿಗೆ ಅಂತರ ಕಾಯ್ದುಕೊಳ್ಳಿ. ಒಂದು ವೇಳೆ ನೀವು ವೈರಸ್ನ ಲಕ್ಷಣಗಳನ್ನು ಅನುಭವಿಸುತ್ತಿದ್ದರೆ, ಪ್ರತ್ಯೇಕತೆಯನ್ನು ಕಾಪಾಡಿಕೊಳ್ಳಿ.
ಸೀನುವಾಗ ಜನರು ಕೈ ಮತ್ತು ಬಾಯಿಯನ್ನು ಮುಚ್ಚಿಕೊಳ್ಳಬೇಕು.
ಸೋಂಕಿತರೊಂದಿಗೆ ಕಪ್ಗಳನ್ನು ಹಂಚಿಕೊಳ್ಳುವುದು ಮತ್ತು ಪಾತ್ರೆಗಳನ್ನು ತಿನ್ನುವುದನ್ನು ತಪ್ಪಿಸಿ
ಅನಾರೋಗ್ಯದ ಸಂದರ್ಭದಲ್ಲಿ ಮನೆಯಲ್ಲೇ ಇರಿ
ಯಾವುದೇ ಚಿಕಿತ್ಸೆ ಇದೆಯೇ?
HMPV ಸೋಂಕನ್ನು ತಡೆಗಟ್ಟಲು HMPV ಮತ್ತು ಇತರ ಲಸಿಕೆಗಳಿಗೆ ಚಿಕಿತ್ಸೆ ನೀಡಲು ಯಾವುದೇ ನಿರ್ದಿಷ್ಟ ಆಂಟಿವೈರಲ್ ಚಿಕಿತ್ಸೆ ಇಲ್ಲ.
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]> ಅಡಕೆ ಮಾರುಕಟ್ಟೆಗೆ ನಕಲಿ ದಾಳಿ ಇಟ್ಟಿದ್ದು, ಇದರಬಗ್ಗೆ ಜಾಗರೂಕರಾಗಿರುವಂತೆಅಂತಾ ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಪೋ ಬೆಳೆಗಾರ ರಿಗೆ ಎಚ್ಚರಿಕೆ ನೀಡಿದೆ.
ಕೆಲವು ತಿಂಗಳ ಹಿಂದೆ ಪಶ್ಚಿಮ ಬಂಗಾಳದ ಕಸ್ಟಮ್ಸ್ ಕಚೇರಿಯಿಂದ ಅಡಕೆಯ ಮಾದರಿ ಯನ್ನು ಅದರವಿಶ್ಲೇಷಣೆಗಾಗಿಅಧಿಕಾರಿಗಳು ಮಂಗಳೂರಿನಕ್ಯಾಂಸ್ಕೋದ ಅಡಕೆ ಸಂಶೋ ಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನಕ್ಕೆ ಕಳುಹಿಸಿ ಕೊಟ್ಟಿದ್ದರು. ಕಸ್ಟಮ್ಸ್ ಹೇಳಿಕೆಯ ಪ್ರಕಾರ ಅವರು 900 ಕೆಜಿಯಷ್ಟು ಅಂತಹ ಮಾಲನ್ನು ತಡೆ ಹಿಡಿದಿದ್ದರು. ತಡೆಹಿಡಿದ ಮಾಲಿನ ಮೌಲ್ಯ 4.50ಲಕ್ಷ ಎಂದುತಿಳಿಸಲಾಗಿತ್ತು.
ಆ ಮಾಲು ಹೊರಗಿನಿಂದ ನೋಡಲು ಕೆಂಪು ಅಡಕೆ (ಬೆಟ್ಟೆ)ಯನ್ನು ಹೋಲುತ್ತಿತ್ತು. ಆದರೆ, ಅವುಗಳನ್ನು ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಡಾ.ಕೇಶವ ಭಟ್ ಅವರು ವಿಶ್ಲೇಷಿಸಿದಾಗ ಅವುಗಳು ಯಾವುದೂ ಅಡಕೆಯೇ ಆಗಿರಲಿಲ್ಲ. ಬದ ಲಾಗಿ ಯಾವುದೋ ಬೇರೆ ಕಾಯಿಯನ್ನು ತುಂಡರಿಸಿ ಅದಕ್ಕೆ ಅಡಕೆ ಚೊಗರನ್ನು ಲೇಪಿಸಿ ದಂತೆ ಕಂಡು ಬಂದಿತ್ತು. ಒಳಗಡೆಯ ರಚನೆ ಅಡಕೆಯ ರಚನೆಯಂತೆ ಇರದೆ ಬಿಳಿ ಬಣ್ಣದಿಂದ ಕೂಡಿತ್ತು ಎಂಬುದನ್ನು ಪತ್ತೆ ಮಾಡಿದ್ದರು.
ಈ ರೀತಿಯಲ್ಲಿ ನಕಲಿ ಅಡಕೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಗುಂಪು ಇರುವುದು ಅಡಕೆ ಬೆಳೆಗಾರರಲ್ಲಿ ಆತಂಕ ಉಂಟು ಮಾಡಿದೆ. ಅಡಕೆ ವರ್ತಕರು ಅದರಲ್ಲೂ ಕೆಂಪಡಕೆ ವ್ಯವಹಾರ ಮಾಡುವವರು ಈ ನಿಟ್ಟಿನಲ್ಲಿ ಅತ್ಯಂತ ಜಾಗರೂಕರಾಗಿರು ವುದು ತುಂಬಾ ಅವಶ್ಯ. ಈ ವಿಷಯವನ್ನು ಕೇಂದ್ರ ಕೃಷಿ ಮಂತ್ರಾ ಲಯದ ಅಧೀನದ ಕಲ್ಲಿಕೋಟೆಯಲ್ಲಿರುವ ಅಡಕೆ ನಿರ್ದೇಶನಾ ಲಯದ ಗಮನಕ್ಕೆ ತರಲಾಗಿದೆ.
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಡಿಸೆಂಬರ್ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>ಹೊಸ ವರ್ಷದ ದಿನವೇ ಕೇಂದ್ರ ಸರ್ಕಾರ ದೇಶದ ಅನ್ನದಾತರಿಗೆ ಹಲವು ಬಂಪರ್ ಕೊಡುಗೆ ಪ್ರಕಟಿಸಿದೆ. ಪ್ರಮುಖವಾಗಿ ಡೈ-ಅಮೋನಿಯಂ ಫಾಸ್ಪೇಟ್ (ಡಿಎಪಿ) ಎನ್ ಬಿಎಸ್ ಸಬ್ಸಿಡಿಯಾಚೆಗಿನ ಏಕ ಸಮಯದ ವಿಶೇಷ ಪ್ಯಾಕೇಜ್ ಅನ್ನು ಇದೇ ಜ.1.ರಿಂದ ಮುಂದಿನ ಆದೇಶದವರೆಗೆ ವಿಸ್ತರಿಸಲು ಬುಧವಾರ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ವನಿಸಲಾಗಿದೆ. ಮುಂದಿನ ಆದೇಶದವರೆಗೂ ಇದು ಜಾರಿಯಲ್ಲಿರಲಿದೆ. ರೈತರಿಗೆ ಕೈಗೆಟುಕುವ ದರದಲ್ಲಿ ಡಿಎಪಿ ಸುಸ್ಥಿರವಾಗಿ ಲಭ್ಯವಾಗುವಂತೆ ಮಾಡುವುದು ಇದರ ಉದ್ದೇಶವಾಗಿದೆ. ಪ್ರತಿ ಮೆಟ್ರಿಕ್ ಟನ್ ಡಿಎಪಿಯ ವಿಶೇಷ ಪ್ಯಾಕೇಜನ್ನು ಎನ್ಬಿಎಸ್ ಸಬ್ಸಿಡಿ ಯಾದ 3,500 ರೂ.ಗೂ ಆಚೆಗೆ ವಿಸ್ತರಿಸುವ ಬಗ್ಗೆ ರಸಗೊಬ್ಬರಗಳ ಸಚಿವಾಲಯ ಮಾಡಿದ್ದ ಶಿಫಾ ರಸನ್ನು ಸಂಪುಟ ಸಭೆ ಅನುಮೋದಿಸಿತು.
ಈ ವಿಸ್ತರಣೆಯಿಂದ ಬೊಕ್ಕಸಕ್ಕೆ ಸುಮಾರು 3,850 ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ. ಇದರಿಂದಾಗಿ, ಕಳೆದ ವರ್ಷದ ಏಪ್ರಿಲ್ನಿಂದ ಇದುವರೆಗೆ ವಿಶೇಷ ಪ್ಯಾಕೇಜ್ಗೆ ಅನುಮೋದಿಸಿದ ಒಟ್ಟು ಮೊತ್ತ 6,475 ಕೋಟಿ ರೂ. ಆಗಲಿದೆ. ಪಿ ಮತ್ತು ಕೆ ರಸಗೊಬ್ಬರಗಳ 28 ಗ್ರೇಡ್ಗಳನ್ನು ರಸಗೊಬ್ಬರ ಉತ್ಪಾದಕರು ಮತ್ತು ಆಮದುದಾರರ ಮೂಲಕ ರೈತರಿಗೆ ಒದಗಿಸಲಾಗುತ್ತಿದೆ. ಎನ್ಬಿಎಸ್ ಯೋಜನೆಯಡಿ ಈ ಸಬ್ಸಿಡಿ 2010ರಿಂದಲೂ ಜಾರಿಯಲ್ಲಿದೆ. ರೈತರ ಕಲ್ಯಾಣಕ್ಕೆ ಆದ್ಯತೆ ನೀಡುತ್ತಿರುವ ಕೇಂದ್ರ ಸರ್ಕಾರ ಡಿಎಪಿ ರಸಗೊಬ್ಬರ ಬೆಲೆಯಲ್ಲಿ ಬದಲಾವಣೆ ಮಾಡಿರಲಿಲ್ಲ. 2024 ಏ.1ರಿಂದ ಡಿ.31ರವರೆಗೆ ವಿಶೇಷ ಪ್ಯಾಕೇಜ್ಗೆ ಕಳೆದ ವರ್ಷ ಜುಲೈನಲ್ಲಿ ಸಚಿವ ಸಂಪುಟ ಅನುಮೋದನೆ ನೀಡಿತ್ತು.
ಫಸಲ್ ಬಿಮಾ ಮುಂದುವರಿಕೆ: ಪ್ರಧಾನ ಮಂತ್ರಿ ಫಸಲ್
ಬಿಮಾ ಯೋಜನೆ(PMFBY) (ಪಿಎಂಎಫ್ಬಿವೈ) ಮತ್ತು ಪುನರ್ರಚಿತ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು 2025- 26ನೇ ಸಾಲಿಗೆ ಮುಂದುವರಿಸುವುದಕ್ಕೂ ಸಭೆ ಸಮ್ಮತಿಸಿತು. ಇದರಿಂದ, 2020-21ರಿಂದ 2025-26ರ ವರೆಗೆ ಬೊಕ್ಕಸಕ್ಕೆ ಒಟ್ಟು 69,515.71 ಕೋಟಿ ರೂಪಾಯಿ ವೆಚ್ಚವಾಗುತ್ತದೆ.
Bele vime-ಈ ಜಿಲ್ಲೆಯ 71,177 ರೈತರಿಗೆ 156.14 ಲಕ್ಷ ಬೆಳೆ ವಿಮೆ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
https://krushirushi.in/Bele-vime-1725
ಸ್ವಯಂಚಾಲಿತ ಹವಾಮಾನ ಕೇಂದ್ರ: ಹವಾಮಾನ ಮಾಹಿತಿ,
ನೆಟ್ವರ್ಕ್ ಡೇಟಾ ಸಿಸ್ಟಮ್ ಉಪಕ್ರಮದಡಿ ಬ್ಲಾಕ್ ಮಟ್ಟದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರಗಳು ಹಾಗೂ ಪಂಚಾಯಿತಿ ಮಟ್ಟದಲ್ಲಿ ಸ್ವಯಂಚಾಲಿತ ಮಳೆ ಮಾಪಕ ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದು ಹವಾಮಾನಕ್ಕೆ ತಕ್ಕಂತೆ ಬೆಳೆ ಬೆಳೆಯಲು ನೆರವಾಗಲಿದೆ. ಮೊಬೈಲ್ ನೆಟ್ವರ್ಕ್ ಇಲ್ಲದ ಕುಗ್ರಾಮಗಳ ರೈತರು ಈ ಕೇಂದ್ರಗಳ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ರೈತರಿಗೆ ಲಾಭವೇನು?: ಪ್ರಧಾನಮಂತ್ರಿ ಫಸಲ್ ಬಿಮಾ
ಯೋಜನೆ ಮತ್ತು ಪುನರ್ ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಮುಂದುವರಿಕೆ ರೈತರಿಗೆ ನೆರವಾಗಲಿದೆ. ಹೆಚ್ಚುವರಿ ಒಂದು ವರ್ಷ ನೈಸರ್ಗಿಕ ವಿಕೋಪಗಳಿಂದ ಆದ ಬೆಳೆ ನಷ್ಟಕ್ಕೆ ಪರಿಹಾರ ಸಿಗಲಿದೆ. ಆ ಮೂಲಕ ಸಂಕಷ್ಟದಲ್ಲಿರುವ ಅನ್ನದಾತರಿಗೆ ಆರ್ಥಿಕ ಸಹಾಯ ಲಭಿಸಲಿದೆ.
ಕೃಷಿ ಅಧಿಕಾರಿಗಳು | 86 RPC + 42HK :128 ಒಟ್ಟು |
ಸಹಾಯಕ ಕೃಷಿ ಅಧಿಕಾರಿಗಳು | 586 RPC + 231 HK : 817 ಒಟ್ಟು |
ಕೃಷಿ ಇಲಾಖೆಯಲ್ಲಿ ಭರ್ತಿ ಮಾಡುವ ಒಟ್ಟು ಹುದ್ದೆಗಳ ಸಂಖ್ಯೆ | 945 |
ಅಧಿಸೂಚನೆ ಬಿಡುಗಡೆ ಆದ ದಿನಾಂಕ | 20-09-2024 |
ಆನ್ಲೈನ್ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ | 03-01-2025 |
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ | 01-02-2025 |
ಕೃಷಿ ಅಧಿಕಾರಿ / ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ ವಿವರ
ಕೃಷಿ ಇಲಾಖೆ ಹುದ್ದೆಗಳಿಗೆ ವರ್ಗಾವಾರು ನಿಗದಿತ ಕನಿಷ್ಠ, ಗರಿಷ್ಠ ವಯಸ್ಸಿನ ಅರ್ಹತೆಗಳು
ಕೃಷಿ ಇಲಾಖೆ ಹುದ್ದೆಗಳಿಗೆ ಅರ್ಜಿ ಶುಲ್ಕ ವಿವರ
ನೋಟಿಫಿಕೇಶನ್ ಹಾಗೂ ಇತರೆ ಹೆಚ್ಚಿನ ಮಾಹಿತಿಗಳಿಗಾಗಿ https://www.kpsc.kar.nic.in/notification.html ವೆಬ್ಸೈಟ್ಗೆ ಭೇಟಿ ನೀಡಿರಿ.
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಅಕ್ರಮ-ಸಕ್ರಮ(Akarama Sakrama) ಯೋಜನೆಯಡಿ ಶೀಘ್ರವೇ 2 ಲಕ್ಷ ಕೃಷಿ ಪಂಪ್ ಸೆಟ್(Agriculture pumpest)ಗಳಿಗೆ ಸಂಪರ್ಕ ಒದಗಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಹೊಸದುರ್ಗ ತಾಲ್ಲೂಕಿನ ನೀರಗುಂದ ಗೇಟ್ ಹತ್ತಿರ ಕುಸುಮ್-ಸಿ ಯೋಜನೆಯಡಿ ಸ್ಥಾಪಿತವಾಗಿರುವ "ಸೋಲಾರ್ ಪಾರ್ಕ್"ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ಸುಮಾರು 4.5 ಲಕ್ಷ ಕೃಷಿ ಪಂಪ್ಸೆಟ್ ಗಳು ಇವೆ. ಈ ಪೈಕಿ ಈಗಾಗಲೆ 2.5 ಲಕ್ಷ ಪಂಪ್ಸೆಟ್ಗಳನ್ನು ಅಕ್ರಮ-ಸಕ್ರಮದಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗಿದೆ, ಇನ್ನೂ 2 ಲಕ್ಷ ಪಂಪ್ಸೆಟ್ಗಳಿಗೆ ಸಂಪರ್ಕ ಒದಗಿಸಲು ಈಗಾಗಲೆ ಏಜೆನ್ಸಿ ಅವರನ್ನು ನಿಗದಿಪಡಿಸಿ ವಹಿಸಲಾಗಿದೆ. ಮುಂದಿನ ಒಂದೂವರೆ ವರ್ಷದೊಳಗೆ ಈ ಯೋಜನೆ ಸಂಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು.
ರೈತರ ಕೃಷಿ ಮತ್ತು ನೀರಾವರಿ ಪಂಪ್ಸೆಟ್ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕುಸುಮ್ ಯೋಜನೆ ರೈತರಿಗೆ ವರದಾನವಾಗಲಿದೆ. ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕುಸುಮ್ ಬಿ ಮತ್ತು ಸಿ ಯೋಜನೆಗೆ ರಾಜ್ಯದಲ್ಲಿ ಈಗಾಗಲೇ ಚಾಲನೆ ನೀಡಲಾಗಿದ್ದು, ಈ ಯೋಜನೆಯಿಂದಾಗಿ ರೈತರಿಗೆ ತಮ್ಮ ಕೃಷಿ ಮತ್ತು ನೀರಾವರಿ ಪಂಪ್ಸೆಟ್ಗಳಿಗೆ ಹಗಲಿನಲ್ಲಿ 7 ಗಂಟೆಗಳ ಕಾಲ ನಿರಂತರ ಗುಣಮಟ್ಟದ ವಿದ್ಯುತ್ ದೊರೆಯಲಿದೆ ಎಂದು ಹೇಳಿದರು.
ಈಗಾಗಲೇ ರಾಜ್ಯಾದ್ಯಂತ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಸ್ಥಳ ಗುರುತಿಸಲಾಗಿದ್ದು, ಮುಖ್ಯಮಂತ್ರಿಗಳ ಸೂಚನೆಯಂತೆ ಒಂದು ತಿಂಗಳಲ್ಲಿ 500 ರಿಂದ 600 ಮೆಗಾ ವ್ಯಾಟ್ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ಅಗತ್ಯ ತಯಾರಿಗಳು ನಡೆದಿವೆ. ವಿದ್ಯುತ್ ಉಪಕೇಂದ್ರಗಳು ಇರುವ ಸ್ಥಳಗಳ ಹತ್ತಿರ ಒಂದು ಮೆಗಾ ವ್ಯಾಟ್ ಉತ್ಪಾದನೆಗೆ ಕನಿಷ್ಟ ಸುಮಾರು 4 ಎಕರೆ ಜಮೀನು ಅಗತ್ಯವಾಗಿ ಬೇಕಾಗುತ್ತದೆ. ವಿದ್ಯುತ್ ಉಪಕೇಂದ್ರದ ಸಾಮಥ್ರ್ಯಕ್ಕೆ ಅನುಗುಣವಾಗಿ ಸೋಲಾರ್ ಪಾರ್ಕ್ಗಳಲ್ಲಿ ವಿದ್ಯುತ್ ಉತ್ಪಾದನೆ ಮಾಡಿ ಅಲ್ಲಿಯೇ ಪೂರೈಕೆ ಮಾಡಿ ಕೊಡಲಾಗುವುದು ಎಂದು ತಿಳಿಸಿದ ಅವರು, ಈಗಾಗಲೇ 1200 ಮೆಗಾ ವ್ಯಾಟ್ ಹಂಚಿಕೆಯಾಗಿದ್ದು, ಬಾಕಿ ಇರುವುದಕ್ಕೂ ಟೆಂಡರ್ ಕರೆಯಲಾಗಿದೆ ಎಂದು ಹೇಳಿದರು.
ರೈತರ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಈ ಯೋಜನೆಯಡಿ ಖಾಸಗಿಯವರು ಬಂಡವಾಳ ಹೂಡಿಕೆ ಮಾಡುತ್ತಾರೆ. ಸರ್ಕಾರದಿಂದ ಲಭ್ಯವಿರುವೆಡೆ ಸರ್ಕಾರಿ ಭೂಮಿ ನೀಡಲಾಗುವುದು, ಅಲ್ಲದೆ ಸೋಲಾರ್ ಘಟಕಗಳಲ್ಲಿ ಉತ್ಪಾದಿಸುವ ವಿದ್ಯುತ್ ಅನ್ನು ಸರ್ಕಾರವೇ ಗರಿಷ್ಟ 3.17 ರೂ. ನಂತೆ ಖರೀದಿ ಮಾಡಲಾಗುವುದು. ಸರ್ಕಾರಿ ಜಮೀನಿನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಪ್ರತಿ ಎಕರೆಗೆ ರೂ.25 ಸಾವಿರ ಹಣವನ್ನು ಖಾಸಗಿ ಏಜೆನ್ಸಿಯವರು ಪ್ರತಿ ವರ್ಷ ಪಾವತಿಸಬೇಕು, ಈ ಹಣವನ್ನು ಜಿಲ್ಲಾಧಿಕಾರಿಗಳ ಬಳಿ ಡಿಪಾಸಿಟ್ ಮಾಡಲಾಗುವುದು. ಆಯಾ ಕ್ಷೇತ್ರದ ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಆಯಾ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲೆ, ಅಂಗನವಾಡಿ, ಆಸ್ಪತ್ರೆ ಅಭಿವೃದ್ಧಿಗೆ ಅನುದಾನ ಬಳಕೆ ಮಾಡಬಹುದಾಗಿದೆ. ಈ ಯೋಜನೆಯಿಂದ ರೈತರಿಗೆ ರಾತ್ರಿಯ ಜೊತೆಗೆ ಹಗಲಿನಲ್ಲಿಯೂ ಉತ್ತಮ ವಿದ್ಯುತ್ ದೊರೆಯಲಿದ್ದು, ನಿದ್ದೆಗೆಟ್ಟು ನೀರಿಗಾಗಿ ಪರಿತಪಿಸುವುದು ತಪ್ಪಲಿದೆ ಎಂದರು.
ತೋಟದ ಮನೆಗಳಿಗೆ ಹಗಲು ಹೊತ್ತು 03 ಫೇಸ್ ಹಾಗೂ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ಕೊಡಲು ಈಗಾಗಲೆ ನಿರ್ಣಯ ಮಾಡಲಾಗಿದ್ದು, ಎಲ್ಲ ಗ್ರಾಮಗಳಿಗೆ ನಿರಂತರ ಜ್ಯೋತಿ ಯಡಿ ವಿದ್ಯುತ್ ಪೂರೈಸಲು ಟೆಂಡರ್ ಪ್ರಕ್ರಿಯೆ ನಡೆದಿದ್ದು, ಶೀಘ್ರ ಕಾರ್ಯಾದೇಶ ನೀಡಲಾಗುವುದು ಎಂದರು.
ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ರಾಜ್ಯದ ಜನರಿಗೆ ಸೋಲಾರ್ ಪ್ಲಾಂಟ್ ಪರಿಚಯಿಸಿ, ಸುಮಾರು 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನಗೆ ಅನುಮೋದನೆ ನೀಡಿದ್ದು, ಈಗಾಗಲೇ ಹಲವೆಡೆ ವಿದ್ಯುತ್ ಉತ್ಪಾದನೆಯಾಗುತ್ತಿದೆ. ರೈತರ ಬೇಡಿಕೆಗೆ ಅನುಗುಣವಾಗಿ ಹಗಲಿನಲ್ಲಿ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ದೊರೆಯಲಿದೆ. ನೀರಗುಂದ ಸೋಲಾರ್ ಪ್ಲಾಂಟ್ನಿಂದ ಈಗಾಗಲೇ ಕಳೆದ ಮೂರು ದಿನಗಳಿಂದ ವಿದ್ಯುತ್ ಸರಬರಾಜು ಆಗುತ್ತಿದ್ದು, ಈ ಭಾಗದ ರೈತರು ಸಂತಸ ವ್ಯಕ್ತಪಡಿಸಿದ್ದು, ಕ್ಷೇತ್ರದ ಉಳಿದ ವಿದ್ಯುತ್ ಉಪಕೇಂದ್ರಗಳ ಬಳಿಯೂ ಸೋಲಾರ್ ಪ್ಲಾಂಟ್ ಸ್ಥಾಪಿಸಲು ಇಂಧನ ಸಚಿವರು ಒಪ್ಪಿದ್ದಾರೆ.
ಹೊಸದುರ್ಗ ತಾಲ್ಲೂಕು ಪದೇ ಪದೇ ಬರಕ್ಕೆ ತುತ್ತಾಗುವ ಪ್ರದೇಶವಾಗಿದ್ದು, ಈ ಭಾಗದಲ್ಲಿ ಯಾವುದೇ ನದಿಯ ನೀರಿನ ಮೂಲ ಲಭ್ಯವಿಲ್ಲ, ಹೀಗಾಗಿ ರೈತರು ಅಂತರ್ಜಲವನ್ನೇ ಹೆಚ್ಚಾಗಿ ನೆಚ್ಚಿಕೊಂಡಿದ್ದಾರೆ. ಸುಮಾರು 70 ಸಾವಿರ ಪಂಪ್ಸೆಟ್ಗಳನ್ನು ಅಕ್ರಮ-ಸಕ್ರಮದಡಿ ಸಂಪರ್ಕ ಕಲ್ಪಿಸಿ, ಗುಣಮಟ್ಟದ ವಿದ್ಯುತ್ ನೀಡಬೇಕಿದೆ. ಇದರ ಜೊತೆಗೆ ಭದ್ರಾ ಮೇಲ್ದಂಡೆ ಯೋಜನೆಯಡಿ 1.35 ಲಕ್ಷ ಎಕರೆಗೆ ನೀರು ಒದಗಿಸಲಾಗುವುದು ಹಾಗೂ ಭದ್ರಾ ಜಲಾಶಯದಿಂದ 800 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಪೂರೈಕೆ ಯೋಜನೆ ಜಾರಿಯಾಗುತ್ತಿದ್ದು, ಇವೆಲ್ಲವಕ್ಕೂ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ, ಇದಕ್ಕಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ 04 ವಿದ್ಯುತ್ ಸಬ್ ಸ್ಟೇಷನ್ ಮಂಜೂರು ಮಾಡುವಂತೆ ಇಂಧನ ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು, ಭೂಮಿಯನ್ನು ಗುರುತಿಸಿಕೊಟ್ಟರೆ, ಆದ್ಯತೆ ಮೇರೆಗೆ ವಿದ್ಯುತ್ ಸ್ಟೇಷನ್ಗಳನ್ನು ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಗ್ಯಾರಂಟಿ ಯೋಜನಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಶಿವಣ್ಣ ಸೇರಿದಂತೆ ಇಂಧನ ಇಲಾಖೆಯ ಅಧಿಕಾರಿಗಳು, ರೈತರು ಇದ್ದರು.
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>
ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ.
ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕೋಳಿ ಮರಿಗಳನ್ನು ವಿತರಿಸಲಾಗುವುದು. ಜೇನು, ಕುರಿ, ಹಸು ಸಾಕಾಣಿಕೆಗೆ ಪ್ರೋತ್ಸಾಹ ನೀಡುತ್ತಿರುವ ಮಾದರಿಯಲ್ಲಿ ನಾಟಿ ಕೋಳಿ ಸಾಕಾಣಿಕೆ ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬಡ ಕುಟುಂಬಗಳ ಮಹಿಳೆಯರಿಗೆ ತಲಾ 20 ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುವುದು. ಪ್ರತಿ ತಾಲೂಕಿಗೆ 106 ಫಲಾನುಭವಿಗಳಂತೆ ಗುರಿ ನಿಗದಿಪಡಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿನ ರೈತ ಮಹಿಳೆಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘದ ಮಹಿಳಾ ಸದಸ್ಯರಿಗೆ, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಯೋಜನೆಯಡಿ ಆದ್ಯತೆ ನೀಡಲಾಗುವುದು.
ನಾಟಿ ಕೋಳಿಗಳಿಗೆ ಪ್ರಸ್ತುತ ಬೇಡಿಕೆ ಹೆಚ್ಚಾಗಿದೆ. ಇವುಗಳ ಸಾಕಾಣೆಗೆ ಹೆಚ್ಚು ಖರ್ಚಾಗುವುದಿಲ್ಲ. ಮನೆ ಮುಂದೆ ಹಿತ್ತಲುಗಳಲ್ಲಿ ಕೋಳಿ ಸಾಕಬಹುದು, ವೆಚ್ಚಕ್ಕಿಂತ ಅಧಿಕ ಲಾಭ ಸಿಗುತ್ತದೆ. ಇವುಗಳ ಸಾಕಾಣಿಕೆಗೆ ಹೆಚ್ಚಿನ ಶ್ರಮ ಅಗತ್ಯವಿರುವುದಿಲ್ಲ. ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಆರ್ಥಿಕ ಸಬಲತೆ ಸಾಧಿಸಲು ತಲಾ 20 ಕೋಳಿ ಮರಿ ವಿತರಿಸಲಾಗುವುದು ಎಂದು ಹೇಳಲಾಗಿದೆ.
1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ(Vetarnary department)ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.
ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
Vetarnary department schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ
ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy - https://krushirushi.in/Cattle-shed-subsidy-scheme-1630
ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahvs.karnataka.gov.in/info-2/Schemes+&+Benefits/kn
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
ಜನವರಿ 1ರಿಂದ ಹಾಲು ಉತ್ಪಾದಕರಿಗೆ ವಿಶೇಷ ಪ್ರೋತ್ಸಾಹ ಧನವನ್ನು 1 ರೂ.ನಿಂದ 1.50 ರೂ.ಗೆ ಹೆಚ್ಚಳ ಮಾಡಲು ಕಳೆದ ನವೆಂಬರ್ 30ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂತೆಯೇ 4.5 ಫ್ಯಾಟ್ ನಿಂದ 8.5 ಎಸ್ಎಂಎಫ್ ಗೆ ರೈತರಿಗೆ ನೀಡುವ № 36.74 0.2 36.95 0.1 0 ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ್ ಶೆಟ್ಟಿ ತಿಳಿಸಿದ್ದಾರೆ.
ಅದೇ ರೀತಿ ರಾಜ್ಯದ 8.90 ಲಕ್ಷ ಹಾಲು ಉತ್ಪಾದಕರಿಗೆ ₹649.76 ಕೋಟಿ ಪ್ರೋತ್ಸಾಹಧನ ನೇರ ಖಾತೆಗೆ ಜಮೆ
Milk incentive status-ಇಲ್ಲಿಯವರೆಗೂ ಜಮಾ ಆಗಿರುವ ಹಾಲಿನ ಪ್ರೋತ್ಸಾಹಧನ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ "ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಪ್ರೋತ್ಸಾಹಧನ ಮಾಹಿತಿ ಸಿಗಲಿದೆ.
ಹೀಗೂ ಚೆಕ್ ಮಾಡಬಹುದು
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/Klda/MilkIncentive?ServiceId=5399&Type=TABLE&DepartmentId=3119
ನಂತರ ನಿಮ್ಮ ಜಿಲ್ಲೆ,ತಾಲೂಕು,Milk Union,ಗ್ರಾಮ, select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ನಿಮ್ಮ ಗ್ರಾಮದಲ್ಲಿ ಯಾರಿಗೆಲ್ಲಾ ಎಷ್ಟು ಹಾಲಿನ ಪ್ರೋತ್ಸಾಹಧನ(Milk incentive) ಬಂದಿದೆ ಎಂದು ತಿಳಿಯಲಿದೆ
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿದರೆ ನಿಮಗೆ pdf download ಮಾಡಿಕೊಂಡು ನಿಮ್ಮ ಹೆಸರು ಚೆಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732
]]>
ಕರ್ನಾಟಕ ಸರ್ಕಾರ ಈ ಆಡಳಿತ ಮತ್ತು ಕೃಷಿ ಇಲಾಖೆ ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ(Rabi crop survey) ರೈತರ ಆಪ್ ಬಿಡುಗಡೆ ಮಾಡಿದ್ದು, ರೈತರು ಗೂಗಲ್ ಪ್ಲೇ ಸ್ಟೋರ್ ನಿಂದ ಹಿಂಗಾರು ರೈತರ ಬೆಳೆ ಸಮೀಕ್ಷೆ 2024-25 ಆಪ್ ಡೌನ್ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಅಪ್ಲೋಡ್ ಮಾಡಬಹುದು.
ರೈತ ಬಾಂಧವರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ಹಿಂಗಾರು ರೈತರ ಬೆಳೆ ಸಮೀಕ್ಷೆ 2024-25 ಎಂಬ ಮೊಬೈಲ್ ಆ್ಯಪ್ ಗೂಗಲ್ ಪ್ಲೇಸ್ಟೋರ್ ನಿಂದ ಡೌನ್ಲೋಡ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://play.google.com/store/apps/details?id=com.csk.farmer23_24.cropsurvey&pli=1
ಮೊದಲು Ekyc ಮೂಲಕ ಆಧಾರ್ ದೃಡಿಕರಿಸಿ ಮೇಲೆ ಕ್ಲಿಕ್ ಮಾಡಿ
ರೈತರ ಅಧಾರ್ ಕಾರ್ಡ ನಂಬರ್ ಅನ್ನು ಹಾಕಿ ಸಹಮತಿ ಇದೆ ಎಂದು ಟಿಕ್ ಮಾಡಿಕೊಂಡು ಕೆಳಗಡೆ ದೃಡೀಕರಣ ವಿಧಾನವನ್ನು ಆಯ್ಕೆ ಮಾಡಿ ಅಲ್ಲಿ OTP ಮೇಲೆ ಕ್ಲಿಕ್ ಮಾಡಿ "ಓಟಿಪಿ ಪಡೆಯಿರಿ" ಬಟನ್ ಮೇಲೆ ಕ್ಲಿಕ್ ಮಾಡಬೇಕು.
ತದನಂತರ ನಿಮ್ಮ ಮೊಬೈಲ್ ಗೆ ಬರುವ 6 ಅಂಕಿಯ OTP ಅನ್ನು ಹಾಕಿ ಸಲ್ಲಿಸಿ ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಎಲ್ಲಾ ವಿವರ ಇಲ್ಲಿ ತೋರಿಸುತ್ತದೆ. ಇಲ್ಲಿ ಮೊಬೈಲ್ ನಂಬರ್ ಹಾಕಿ "ಸಕ್ರಿಯಗೊಳಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ OTP ಅನ್ನು ನಮೂದಿಸಿ "ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ ಸಕ್ರಿಯಗೊಳಿಸಿಕೊಳ್ಳಬೇಕು.
ಇದಾದ ಬಳಿಕ ನಿಮ್ಮ ಸರ್ವೆ ನಂಬರ್ ಗಳು ಇಲ್ಲಿ ತೋರಿಸುತ್ತವೆ ನಂತರ ನಿಮ್ಮ ಜಮೀನಿನ್ನು ಭೇಟಿ ಮಾಡಿ ಒಂದು ಒಂದು ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ "ಬೆಳೆ ವಿವರ ದಾಖಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಪ್ರಸ್ತುತ ಬೆಳೆದಿರುವ ಬೆಳೆ ವಿವರವನ್ನು ಹಾಕಿ ಬೆಳೆಯ 2 ಪೋಟೋ ಕ್ಲಿಕ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬೇಕು.
ಒಂದೊಮ್ಮೆ ನಿಮ್ಮ ಸರ್ವೆ ನಂಬರ್ ಗಳು ಕಾಣಿಸದೇ ಇದ್ದಲ್ಲಿ "ಸರ್ವೆ ನಂಬರ್ ಸೇರಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ ಬಿಟ್ಟು ಹೋದ ಸರ್ವೆ ನಂಬರ್ ಅನ್ನು ಸೇರಿಸಬಹುದು.
ನಿಮ್ಮ ಜಮೀನಿನ ಬೆಳೆ ವಿವರ ದಾಖಲಿಸಿದ ಬಳಿಕ ಕೊನೆಯಲ್ಲಿ "ಅಪ್ಲೋಡ್ ಮಾಡಿ" ಬಟನ್ ಮೇಲೆ ಕ್ಲಿಕ್ ಮಾಡಿ ತಪ್ಪದೇ ನೀವು ಮಾಡಿರುವ ಬೆಳೆ ಸಮೀಕ್ಷೆ ವರದಿಯನ್ನು ಅಪ್ಲೋಡ್ ಮಾಡಬೇಕು ಇಲ್ಲವಾದಲ್ಲಿ ಈ ವಿವರವು ನಿಮ್ಮ ಮೊಬೈಲ್ ನಲ್ಲೇ ಉಳಿದು ಬಿಡುತ್ತದೆ.
ಸದರಿ ಮಾಹಿತಿಯನ್ನು ಬೆಳೆ ವಿಮೆ(crop insurance), ಬೆಳೆ ನಷ್ಟ ಪರಿಹಾರ(crop loss), ಬೆಂಬಲ ಬೆಲೆ(MSP) ಮತ್ತು ಸರ್ಕಾರದ ವಿವಿಧ ಯೋಜನೆ ಅಡಿ ಸವಲತ್ತುಗಳನ್ನು ಒದಗಿಸಲು ಆರ್ ಟಿ ಸಿ ಯಲ್ಲಿ ಅಳವಡಿಸಲು ಬಳಸಲಾಗುತ್ತದೆ. ರೈತರು ಹೆಚ್ಚಿನ ಆಸಕ್ತಿಯೊಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರು ತಾವೇ ಖುದ್ದಾಗಿ ದಾಖಲಿಸಬೇಕು.
ಬೆಳೆ ಸಮೀಕ್ಷೆಯ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಲ್ಲಿ, ಬೆಳೆ ವಿಮಾ ಯೋಜನೆ ಅಡಿ ಸರ್ವೆ ನಂಬರ್ ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಳನ್ನು ಕೈಗೊಳ್ಳಲು ಸರ್ವೆ ನಂಬರ್ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಸಾದ್ಯವಾಗುತ್ತದೆ.
ಅಲ್ಲದೇ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆ ಅನುಷ್ಠಾನಕ್ಕಾಗಿ, ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಬಳಸಬಹುದಾಗಿದೆ. ಜಿಲ್ಲೆಯ ರೈತ ಬಾಂಧವರು ತಪ್ಪದೇ ತಮ್ಮ ಜಮೀನಲ್ಲಿರುವ ಬೆಳೆಗಳ ವಿವರವನ್ನು ತಪ್ಪದೇ ದಾಖಲಿಸಬೇಕು. ಗ್ರಾಮಗಳಲ್ಲಿರುವ ವಿದ್ಯಾವಂತ ಯುವಕರು ರೈತರ ಬೆಳೆ ಸಮೀಕ್ಷೆ ಆ್ಯಪ್ ಡೌನ್ಲೋಡ್ ಮಾಡಿಕೊಂಡು ತಮ್ಮ ಹಳ್ಳಿಯ ರೈತ ಸಮುದಾಯದ ಬೆಳೆ ಮಾಹಿತಿ ದಾಖಲಿಸಬಹುದು. ಬೆಳೆ ವಿವರ ದಾಖಲಾಗದಿದ್ದಲ್ಲಿ ಸರ್ಕಾರದ ಯೋಜನೆಗಳಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಗ್ರಾಮದ ಖಾಸಗಿ ನಿವಾಸಿ (ಪಿ.ಆರ್), ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾ ಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಇಲಾಖೆಯ ಅಧಿಕಾರಿಗಳನ್ನು ಮತ್ತು ಟೋಲ್ ಫ್ರೀ ಸಂಖ್ಯೆ 8448447715ಗೆ ಸಂಪರ್ಕಿಸಬಹುದಾಗಿದೆ
]]>
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ(Vetarnary department)ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.
ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
Vetarnary department schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ
ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy - https://krushirushi.in/Cattle-shed-subsidy-scheme-1630
ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>
ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ(poultry), ಕುರಿ(Sheep), ಮೇಕೆ(goat), ಹಂದಿ ಸಾಕಾಣಿಕೆ ಮತ್ತು ರಸಮೇವು(Silage) ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.
National livestock mission
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ
(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)
ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ (Kisan credit card)ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.
ಅವಶ್ಯಕ ದಾಖಲಾತಿಗಳು :-
1)ಆಧಾರ,
2)ಪಹಣಿ ಪತ್ರ
3)ಬ್ಯಾಂಕ್ಖಾತೆ ಸಂಖ್ಯೆ,
ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು
4)ಭಾವ ಚಿತ್ರ.
ಕ್ರ.ಸಂ |
ಘಟಕ |
ಸೌಲಭ್ಯಗಳ ವಿವರ |
|
ಹೈನುಗಾರಿಕೆ |
|
1 |
ಮಿಶ್ರತಳಿ ದನಗಳ ನಿರ್ವಹಣೆ (1+1) |
ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ |
|
ಆ. ಸುಧಾರಿತ ಎಮ್ಮೆಗಳ ನಿರ್ವಹಣೆ |
ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ |
|
ಕುರಿ ಸಾಕಾಣಿಕೆ |
|
2 |
ಕುರಿಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ |
|
ಕುರಿಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (10) |
ರೂ. 13,000 ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (20) |
ರೂ. 26,000 ರಂತೆ ಸಾಲ ಸೌಲಭ್ಯ |
|
ಮೇಕೆ ಸಾಕಾಣಿಕೆ |
|
3 |
ಮೇಕೆಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ |
|
ಮೇಕೆಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ |
4 |
ಹಂದಿ ಸಾಕಾಣಿಕೆ (10) |
ರೂ,60,000 ರಂತೆ ಸಾಲ ಸೌಲಭ್ಯ |
|
ಕೋಳಿ ಸಾಕಾಣಿಕೆ |
|
5 |
ಮಾಂಸದ ಕೋಳಿ ಸಾಕಾಣಿಕೆ |
2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ |
|
ಮೊಟ್ಟೆ ಕೋಳಿ ಸಾಕಾಣಿಕೆ |
1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ |
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.
Vetarnary department subsidy schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಹಾಲು ಉತ್ಪಾದಕರಿಗೆ ಪ್ರೋತ್ಸಾಹ(Milk incentive)
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ಲಸಿಕಾ ಕಾರ್ಯಕ್ರಮ(Vaccination program)
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ(Back yard poultry)
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ(e-status) ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ(DBT status) ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ಸೂಚನೆ-ಜಿಲ್ಲೆ select ಮಾಡುವಾಗ ತಪ್ಪಾಗಿ ಬೇರೆ ಜಿಲ್ಲೆ select ಮಾಡಿದರೆ ಈ ಕೆಳಗಿನಂತೆ No data found ಎಂದು ತೋರಿಸುತ್ತದೆ. ಅದಕ್ಕಾಗಿ ಸರಿಯಾದ ಜಿಲ್ಲೆಯನ್ನು select ಮಾಡಿ)
ನಂತರ ನೇರ ನಗದು ವರ್ಗಾವಣೆ ಸ್ಥಿತಿ (Status of DBT) ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್(Ration card number) ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ (Annabhagya amount)ಮೊತ್ತವನ್ನು ತೋರಿಸುತ್ತದೆ
ರಾಜ್ಯ ಸರ್ಕಾರವು ಸಾಮಾನ್ಯ ಜನರ ಮತ್ತು ಕೂಲಿ ಕಾರ್ಮಿಕರ ಏಳಿಗೆಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು (MGNAREGA)ಜಾರಿಗೆ ತಂದಿದ್ದಾರೆ.
ಮಹಾತ್ಮ ಗಾಂಧಿ ನರೇಗಾ ಯೋಜನೆ(NAREGA) ಅಡಿ ವೈಯಕ್ತಿಕ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಯ ಈ ಕೆಳಕಂಡ ವರ್ಗಗಳಲ್ಲಿ ಯಾವುದಾದರೂ ಒಂದು ವರ್ಗದಲ್ಲಿ ಅರ್ಹರಾಗಿರತಕ್ಕದ್ದು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ
ಅಲೆಮಾರಿ ಬುಡಕಟ್ಟುಗಳು
ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು
ಮಹಿಳಾ ಪ್ರಧಾನ ಕುಟುಂಬಗಳು
ವಿಕಲಚೇತನ ಕುಟುಂಬಗಳು
ಭೂ ಸುಧಾರಣಾ ಫಲಾನುಭವಿಗಳು
ವಸತಿ ಯೋಜನೆಗಳ ಫಲಾನುಭವಿಗಳು
ಅರಣ್ಯ ಹಕ್ಕು ಕಾಯಿದೆ 2006ರ ಫಲಾನುಭವಿಗಳು
ಸಣ್ಣ ಮತ್ತು ಅತಿ ಸಣ್ಣ ರೈತರು
ಫಲಾನುಭವಿಯು ವೈಯಕ್ತಿಕ ಸೌಲಭ್ಯ ಪಡೆಯಲು
ಫಲಾನುಭವಿಯು ಕಡ್ಡಾಯವಾಗಿ ನರೇಗಾ ಯೋಜನೆಯ ಜಾಬ್ ಕಾರ್ಡ್(Job card) ಹೊಂದಿರಬೇಕು
ಫಲಾನುಭವಿಗೆ ನೀಡಲಾದ ವೈಯಕ್ತಿಕ ಕಾಮಗಾರಿಯಲ್ಲಿ ಆತನ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಾದರು ಕೆಲಸ ನಿರ್ವಹಿಸಬೇಕು
ನರೇಗಾ ಯೋಜನೆಯಡಿ ಫಲಾನುಭವಿಕೆ ನೀಡಬಹುದಾದ ವಯಕ್ತಿಕ ಕಾಮಗಾರಿಗಳ ಗರಿಷ್ಠ ಮಟ್ಟದ ಮಿತಿಯನ್ನು 2 ಲಕ್ಷಗಳಿಗೆ ನಿಗದಿಪಡಿಸಿ ಸದರಿ ಗರಿಷ್ಠ ಮೊತ್ತದ ಮಿತಿಯನ್ನು ಹೆಚ್ಚಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗಿರುತ್ತದೆ
ಯೋಜನೆ ಅಡಿ ನೊಂದಾಯಿತವಾದ ಒಂದು ವರ್ಷ ಕುಟುಂಬವು ತನ್ನ ಜೀವಿತಾವಧಿಯಲ್ಲಿ ಗರಿಷ್ಠ ಎರಡು ವರೆ ಲಕ್ಷದ ಗಳವರೆಗೆ ಯೋಜನೆ ಅಡಿ ನೀಡಲಾಗುವ ವೈಯಕ್ತಿಕ ಕಾಮಗಾರಿಗಳನ್ನು ಪಡೆದುಕೊಳ್ಳಬಹುದಾಗಿದೆ
ನರೇಗಾ ಯೋಜನೆಯಡಿ ಕೃಷಿಹೊಂಡ ನಿರ್ಮಾಣ
ನರೇಗಾ ಯೋಜನೆ ಅಡಿ ಅರ್ಹ ಫಲಾನುಭವಿಯು ಯೋಜನೆ ಅಡಿ ನಿರ್ಮಿಸಿಕೊಂಡ ಕೃಷಿಹೊಂಡ ಕಾಮಗಾರಿಯನ್ನು ಮುಂದಿನ ಐದು ವರ್ಷಗಳವರೆಗೆ ಮುಚ್ಚತಕ್ಕದ್ದಲ್ಲ.
ಒಂದು ವೇಳೆ ಫಲಾನುಭವಿಯು ಕೃಷಿ ಹೊಂಡವನ್ನು ಮುಚ್ಚಿದ್ದಲ್ಲಿ ಕೃಷಿಹೊಂಡ ನಿರ್ಮಾಣಕ್ಕಾಗಿ ತಗಲಿದ ವೆಚ್ಚ ಹಾಗೂ ಶೇಕಡ 18ರಷ್ಟು ಬಡ್ಡಿ ಸೇರಿ ಸರ್ಕಾರಕ್ಕೆ ಬರಣ ಮಾಡತಕ್ಕದ್ದು
ಕೃಷಿ ಹೊಂಡ ನಿರ್ಮಾಣ ಕಾಮಗಾರಿಯನ್ನು ಅನುಷ್ಠಾನಗೊಳಿಸುವ ಮುಂಚೆ ಫಲಾನುಭವಿಗಳಿಂದ ಮುಚ್ಚಳಿಕೆ ಪತ್ರವನ್ನು ಕಡ್ಡಾಯವಾಗಿ ಪಡೆಯತಕ್ಕದ್ದು
ಕೃಷಿ ಹೊಂಡ ಕಾಮಗಾರಿಗಳ ಕ್ರಿಯಾಯೋಜನೆಯನ್ನು ಅನುಮೋದನೆಗಾಗಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸುವಾಗ ಮುತ್ತಳಿಕೆ ಪತ್ರದ ಪ್ರತಿಯನ್ನು ಲಗತ್ತಿಸುವುದು
ಕಾಮಗಾರಿಗಳ ಆಯ್ಕೆ ಮಾಡುವಾಗ ತಾಂತ್ರಿಕವಾಗಿ ಸೈಟ್ ಫೀಸಿಬಿಲಿಟಿ ಇರುವುದನ್ನ ಖಚಿತಪಡಿಸಿಕೊಳ್ಳುವುದು
ಕೃಷಿಹೊಂಡ ಕಾಮಗಾರಿಯ ಅನುಮೋದನೆಯಾದ ಆರ್ಥಿಕ ವರ್ಷದಲ್ಲಿಯೇ ಕಡ್ಡಾಯವಾಗಿ ಪೂರ್ಣಗೊಳಿಸುವುದು
ಅನುಷ್ಠಾನಗೊಳಿಸುವಾಗ ಮೂರು ಹಂತದ Geo Tag ಮಾಡುವ ಪ್ರಕ್ರಿಯೆಯನ್ನು ನಿಗದಿ ಅವಧಿಯೊಳಗೆ ಪೂರ್ಣಗೊಳಿಸುವುದು ಕಡ್ಡಾಯವಾಗಿರುತ್ತದೆ
ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಸಿಟಿಜನ್ ಇನ್ಫಾರ್ಮಶನ್ ಬೋರ್ಡ್ ಅಳವಡಿಸತಕ್ಕದ್ದು.
ದನದ ಶೆಡ್ ನಿರ್ಮಾಣಕ್ಕೆ 57,000 ಸಹಾಯಧನ
ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ದನಗಳ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ಯ ಇಲಾಖೆಗಳು ಮೊದಲು ನೀಡುತ್ತಿರುವ ಸಹಾಯಧನವನ್ನು ಹೆಚ್ಚಳ ಮಾಡಿ, ರಾಜ್ಯದ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿಯನ್ನು ನೀಡಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಅಂದರೆ 2022ರ ಸಾಲಿನ ಏಪ್ರಿಲ್ 1 ರಿಂದ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೂಲಿ ಕಾರ್ಮಿಕರ ಮೊತ್ತವನ್ನು ರೂಪಾಯಿ 289ರೂ.ನಿಂದ ರೂಪಾಯಿ 309ರೂ.ವರೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಮಿಕರ ಕೂಲಿ ಮೊತ್ತವನ್ನು ಹೆಚ್ಚಿಸಿ ಕೂಲಿಕಾರರಿಗೆ ಸಿಹಿಸುದ್ದಿ ನೀಡಿದೆ.
ರೈತರಿಗೆ ದನದ ಕೊಟ್ಟಿಗೆ(Danada shed) ಅಥವಾ ಶೆಡ್ ನಿರ್ಮಾಣದ ಬಗ್ಗೆ ಅಂದರೆ ಯಾರು ಹಸುಗಳು ಅಥವಾ ಎಮ್ಮೆಗಳನ್ನು ಸಾಕಿದ್ದಾರೋ ಅಥವಾ ನಿಮ್ಮ ಮನೆಯಲ್ಲಿ ಅಥವಾ ನಿಮ್ಮ ಮನೆ ಹಿಂದೆ ಇರುವ ಜಾಗದಲ್ಲಿ ಅಥವಾ ಎಲ್ಲಿ ನಿಮಗೆ ಸಂತ ಜಾಗವಿದೆಯೋ ಅಲ್ಲಿ ನೀವು ದನದ ಕೊಟ್ಟಿಗೆ ಅಥವಾ ದನದ ಶೆಡ್ ಅನ್ನು ನಿರ್ಮಾಣ ಮಾಡಲು ಪಂಚಾಯಿತಿ ವತಿಯಿಂದ ರೈತರಿಗೆ ಮತ್ತು ಆಸಕ್ತರಿಗೆ ಸಹಾಯಧನ ನೀಡಲಾಗುತ್ತದೆ.
ಸಾಮಾನ್ಯ ವರ್ಗದ ಜನರಿಗೆ ಸರಿ ಸುಮಾರು ರೂಪಾಯಿ 20,000 ರೂಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ವತಿಯಿಂದ ಅದನ್ನು ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸುಮಾರು 43,000ರೂಗಳ ಸಹಾಯಧನವನ್ನು ಈ ರಾಜ್ಯ ಸರ್ಕಾರದ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಪಂಚಾಯಿತಿ ಕಡೆಯಿಂದ ನೀಡುವ ಈ ಒಟ್ಟು ಮೊತ್ತದಲ್ಲಿ ಅಂದರೆ ಈ 43,000ರೂ.ಗಳಲ್ಲಿ, ಫಲಾನುಭವಿ ರೈತರಿಗೆ ಸುಮಾರು 8,996ರೂ.ಗಳನ್ನು ಅವರ ಕೂಲಿ ಮೊತ್ತವಾಗಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಈ ಸಹಾಯಧನವನ್ನು ನರೇಗಾ ಕಾರ್ಡ್ ಹೊಂದಿರುವ ರೈತರಿಗೆ ಅಥವಾ ಅರ್ಜಿದಾರರಿಗೆ ಮಾತ್ರ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಶೆಡ್ ಅಥವಾ ದನದ ಕೊಟ್ಟಿಗೆ ನಿರ್ಮಾಣ ಮಾಡಲಿಕ್ಕೆ ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಉಳಿದ ಮೊತ್ತವನ್ನು ಅಂದರೆ ಉಳಿದ 34,000ರೂ.ಗಳನ್ನು ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಾಮಾನ್ಯ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಇದರ ಅರ್ಧ ಮೊತ್ತ ಸಿಗುತ್ತಿತ್ತು. ಅಂದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ರೂಪಾಯಿ 8,996ರೂ.ಗಳ ಕೂಲಿಯನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಲ್ಲರಿಗೂ ಸಮಾನವಾದ ಕೂಲಿಯನ್ನು ನೀಡಲಾಗುತ್ತದೆ.
ಆದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಿಗುವ ಉಳಿದ 34,000ರೂ.ಗಳ ಹಣದಲ್ಲಿ ಸಾಮಾನ್ಯ್ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಈ 34,000ರೂ.ಗಳಲ್ಲಿ ಕೇವಲ ಅರ್ಧ ಮೊತ್ತವನ್ನು ನೀಡಲಾಗುತ್ತಿತ್ತು.
ಅಂದರೆ ಸರಿಸುಮಾರು 20,000ರೂ.ಗಳನ್ನು ಸಾಮಾನ್ಯ ವರ್ಗದವರಿಗೆ ಅಥವಾ ಜನರಲ್ ಕೆಟಗರಿಯವರಿಗೆ ಈ ಯೋಜನೆಯ ಅಡಿಯಲ್ಲಿ ಪಂಚಾಯಿತಿಯ ಕಡೆಯಿಂದ ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭ್ಯರ್ಥಿಗಳಿಗೆ ರೂಪಾಯಿ 43,000ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ.
ರೈತರು ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ದನದ ಕೊಟ್ಟಿಗೆ ಅಥವಾ ಶೆಡ್ ನ ಅಳತೆ ಎಷ್ಟಿರಬೇಕು?
• ರೈತರು ಈ ಯೋಜಯಡಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ಕಟ್ಟುವ ದನದ ಕೊಟ್ಟಿಗೆ ಅಥವಾ ಶೆಡ್ 5 ಫೀಟ್ ಎತ್ತರದ ಗೋಡೆಯನ್ನು ಹೊಂದಿರಬೇಕು.
• ಹಸುಗಳಿಗೆ ಮೇವು ಹಾಗೂ ನೀರಿನ ವ್ಯವಸ್ಥೆಗಾಗಿ ಗೋದಲಿಯನ್ನು ನಿರ್ಮಾಣ ಮಾಡಿರಬೇಕು.
• ಜಾನುವಾರುಗಳಿಗೆ ಶೆಡ್ ನಲ್ಲಿ ಗಾಳಿ ಮತ್ತು ಬೆಳಕು ಆಡಲು ಕೊಟ್ಟಿಗೆಗೆ ಶೆಡ್ ಶೀಟ್ಗಳನ್ನು ಹಾಕಬೇಕು.
•ಇವೆಲ್ಲವುದರ ಜೊತೆಗೆ ನೀವು ಈ ಯೋಜನೆಯಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನರೇಗಾ ನಾಮಫಲಕವನ್ನು ಕಡ್ಡಾಯವಾಗಿ ಹಾಕಬೇಕಾಗಿರುತ್ತದೆ.
• ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಿಕೊಳ್ಳಲು ರೈತರು ಮೊದಲನೆಯದಾಗಿ ತಮಗೆ ಸಂಬಂಧಪಟ್ಟ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ. ಅಂದರೆ ಈ ಯೋಜನೆಯಡಿಯಲ್ಲಿ ಯಾರ್ಯಾರು ಸಹಾಯ ಧನವನ್ನು ಪಡೆಯಬೇಕೆಂದು ಕೊಂಡಿದ್ದರೋ ಅಥವಾ ಈ ಯೋಜನೆಯ ಫಲಾನುಭವಿಯಾಗಲು ಬಯಸುವಂತಹ ಅರ್ಜಿದಾರರು ತಮ್ಮ ಹೆಸರನ್ನು ನಿಮಗೆ ಹತ್ತಿರವಿರುವ ಅಥವಾ ನಿಮಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಬೇಕಾಗಿರುತ್ತದೆ.
• ಪ್ರತಿವರ್ಷ ಜಾರಿಗೊಳಿಸುವ ಈ ಯೋಜನೆಯಲ್ಲಿ ನಿಮ್ಮ ಹೆಸರನ್ನು ಸೇರಿಸಬೇಕು. ಅಂದಾಗ ಮಾತ್ರ ನೀವು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
• ಇದಾದನಂತರ ಸಂಬಂಧಪಟ್ಟ ಪಂಚಾಯಿತಿಯ ಅಧಿಕಾರಿಗಳು ಬಂದು ನೀವು ದನದ ಕೊಟ್ಟಿಗೆ ಅಥವಾ ಶೆಡ್ಕಟ್ಟಬೇಕೆಂದು ಕೊಂಡಿರುವ ಖಾಲಿ ಜಾಗಕ್ಕೆ ಬಂದು ಭೇಟಿ ನೀಡಿ, ಆ ಜಾಗದ GPS ಅನ್ನು ಮಾಡಿ, ಆ ಜಾಗದ ಸರ್ವೆ ಮಾಡಿ ನಿಮಗೆ ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಅನುಮತಿಯನ್ನು ನೀಡುತ್ತಾರೆ.
• ಅದಾದ ನಂತರ ನೀವು ಕೊಟ್ಟಿಗೆ ಕಟ್ಟಲು ಬೇಕಾಗುವ ಸಾಮಗ್ರಿಗಳನ್ನು ಪಂಚಾಯಿತಿ ನೀಡುವ ಸಹಾಯಧನದಲ್ಲಿ ತಂದು ನಿಮ್ಮ ಕೊಟ್ಟಿಗೆ ಕಟ್ಟುವ ಕೆಲಸವನ್ನು ಪ್ರಾರಂಭಿಸಬಹುದು.
• ನೀವು ಕೊಟ್ಟಿಗೆ ಕಟ್ಟುವ ಕೆಲಸವನ್ನು ಶುರು ಮಾಡುವ ಮೊದಲು ಒಂದು ಕಲ್ಲಿನ ಬೋರ್ಡನ್ನು ಅಂದರೆ ನರೇಗಾ ನಾಮಫಲಕವನ್ನು ಬರೆಸಬೇಕಾಗಿರುತ್ತದೆ.
ಈ ಬೋರ್ಡ್ ನೀವು ಯಾವ ಯೋಜನೆಯಡಿ ಈ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದೀರಿ.ಎಂಬುದನ್
ಇದರಲ್ಲಿ ನೀವು ಯೋಜನೆ ಪಡೆಯುತ್ತಿರುವ ವರ್ಷ, ಗ್ರಾಮ ಪಂಚಾಯಿತಿ ಹೆಸರು, ತಾಲೂಕು ಮತ್ತು ಜಿಲ್ಲೆಯನ್ನು ಒಳಗೊಂಡಿರುತ್ತದೆ.
ಈ ನರೇಗಾ ನಾಮಫಲಕಾದಲ್ಲಿ ಫಲಾನುಭವಿಯ ಹೆಸರು ನಮೂದಿಸಲಾಗಿರುತ್ತದೆ.
ಹಾಗೂ ಅದೇ ರೀತಿ ಫಲಾನುಭವಿಯು ಈ ನರೇಗಾ ಉದ್ಯೋಗ ಖಾತರಿ ಯೋಜನೆಯನ್ನು ಪಡೆದುಕೊಳ್ಳುತ್ತಿರುವ ಕಾಮಗಾರಿ ಸಂಕೇತವನ್ನು ಒಳಗೊಂಡಿರುತ್ತದೆ.
ಈ ನರೇಗಾ ನಾಮಫಕದಲ್ಲಿ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಒಟ್ಟು ಬಿಡುಗಡೆಯಾದ ಮೊತ್ತ, ಎಷ್ಟು ಬಿಡುಗಡೆಯಾಗಿದೆ? ಯಾವುದಕ್ಕೆಲ್ಲ ಬಿಡುಗಡೆಯಾಗಿದೆ? ಖರ್ಚಾದ ಮೊತ್ತ ಮತ್ತು ಕೊಟ್ಟಿಗೆ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳ ಮೊತ್ತ, ಎಲ್ಲವನ್ನು ಒಳಗೊಂಡಿರುತ್ತದೆ.
ನರೇಗಾ ಯೋಜನೆಯ ಅಡಿಯಲ್ಲಿ ಸಹಾಯಧನ ಪಡೆದುಕೊಳ್ಳಲು ದನದ ಕೊಟ್ಟಿಗೆ ಹೇಗಿರಬೇಕು? ಅದರ ಉದ್ದ ಮತ್ತು ಅಳತೆಗಳು ಎಷ್ಟಿರಬೇಕು?
* ದನದ ಕೊಟ್ಟಿಗೆಯ ಅಗಲವು ಸುಮಾರು ನಾಲ್ಕು ಮೀಟರುಗಳಷ್ಟು ಇರಬೇಕು.
* ದನದ ಕೊಟ್ಟಿಗೆ ಅಥವಾ ಶೆಡ್ನ ಉದ್ದವು ಏಳು ಮೀಟರ್ಗಳಷ್ಟು ಇರಬೇಕು.
*ಅಂದರೆ ಸಾಮಾನ್ಯವಾಗಿ 22 ಅಡಿ ಉದ್ದ ಮತ್ತು13 ಅಡಿ ಅಗಲವನ್ನು ಹೊಂದಿರಬೇಕಾಗುತ್ತದೆ.
* ದನದ ಕೊಟ್ಟಿಗೆಯು ಕನಿಷ್ಠ ಅಗಲ ಮತ್ತು ಉದ್ದವಗಳನ್ನು ಹೊಂದಿರಬೇಕಾಗುತ್ತದೆ.
* ಇದಕ್ಕಿಂತ ಕಡಿಮೆ ಉದ್ದ ಮತ್ತು ಅಗಲಗಳ ಅಳತೆಗಳನ್ನು ಹೊಂದಿದ್ದರೆ ನಿಮಗೆ ಸಿಗುವ ಸಹಾಯಧನದಲ್ಲಿ ಮೊತ್ತವು ಕಡಿಮೆಯಾಗುತ್ತದೆ. ಅಂದರೆ ನಿಮಗೆ ಸಿಗುತ್ತಿರುವ ಸಾಮಗ್ರಿ ಮೊತ್ತದಲ್ಲಿ ಸಹಾಯಧನ ಕಡಿಮೆಯಾಗುತ್ತದೆ.
* ಇದಕ್ಕಿಂತ ಜಾಸ್ತಿ ಉದ್ದ ಮತ್ತು ಅಗಲಗಳನ್ನು ಹೊಂದಿರಬಹುದು. ಆದರೆ ಈ ಕನಿಷ್ಠ ಅಳತೆಗಳ ಕೆಳಗೆ ಅಳತೆಗಳನ್ನು ಹೊಂದಿರಬಾರದು.
* ದನದ ಕೊಟ್ಟಿಗೆ ನಿರ್ಮಾಣದ ಸಮಯದಲ್ಲಿ ದನಗಳನ್ನು ಕಟ್ಟುವ ಜಾಗದಲ್ಲಿ ನೆಲವನ್ನು ಕಾಂಕ್ರೀಟ್ ನಿಂದ ಮಾಡಿರಬೇಕಾಗಿರುತ್ತದೆ. ಯಾವುದೇ ತರದ ಚಪ್ಪಡಿ ಕಲ್ಲುಗಳನ್ನು ಮತ್ತು ಇನ್ನಿತರೆ ರಬ್ಬರ್ ಮ್ಯಾಟ್ ಅಥವಾ ನೆಲಹಾಸುಗಳನ್ನು ಬಳಸುವಂತಿಲ್ಲ. ನೀವು ನೆಲವನ್ನು ಕಾಂಕ್ರಿಟ್ ನಿಂದ ಮಾಡಿರದಿದ್ದರೆ ನಿಮಗೆ ಸಹಾಯಧನವನ್ನು ನೀಡಲು ಬರುವುದಿಲ್ಲ.
ಮೊದಲು ನೀವು ದನದ ಕೊಟ್ಟಿಗೆ ನಿರ್ಮಾಣ ಮಾಡಬೇಕೆಂದುಕೊಳ್ಳುವ ಖಾಲಿ ಜಾಗದಲ್ಲಿ ಫೋಟೋ ತೆಗೆಯಬೇಕು. ನಂತರ 40MM ಜೆಲ್ಲಿ ಕಲ್ಲು ಅಂದರೆ(ಕಡಿಗಳು) ಗಳನ್ನು ಹಾಕಿ ಸಮತಟ್ಟು ಮಾಡಬೇಕಾಗಿರುತ್ತದೆ. ಇದಾದ ನಂತರ ಅದರ ಮೇಲೆ ಕಾಂಕ್ರೆಟ್ ನಿಂದ ನೆಲವನ್ನು ಮುಚ್ಚಬೇಕಾಗುತ್ತದೆ.
* ದನಗಳ ಕೊಟ್ಟಿಗೆಯಲ್ಲಿ ಮೇವು ಅಥವಾ ನೀರಿನ ಸೌಲಭ್ಯಕ್ಕಾಗಿ ಗೋದಲಿಯನ್ನು ಇಟ್ಟಿಗೆಯನ್ನು ಬಳಸಿ ಕಟ್ಟಬೇಕು. ಕಟ್ಟಿದ ನಂತರ ಇಟ್ಟಿಗೆಗಳನ್ನು ಪ್ಲಾಸ್ಟರ್ ನಿಂದ ಮುಚ್ಚಬೇಕು.
* ಹಾಗೆಯೇ ದನಗಳನ್ನು ಗೋದಲಿಗೆ ಕಟ್ಟಲು ಕಬ್ಬಿಣದ ಬಳೆಗಳನ್ನು ಸಹ ಬಳಸಬಹುದು.
* ದನಗಳ ಮೂತ್ರ ಮತ್ತು ಕೊಟ್ಟಿಗೆ ತೊಳೆದ ನಂತರ ಅದರ ನೀರು ಸುಲಭವಾಗಿ ಹೋಗಲು ಒಂದು ಗುಂಡಿ ಅಥವಾ ಒಂದು ಚರಂಡಿ ವ್ಯವಸ್ಥೆಯನ್ನು ಮಾಡಬೇಕಾಗಿರುತ್ತದೆ. ಅಥವಾ ನಿಮಗೆ ಚರಂಡಿ ವ್ಯವಸ್ಥೆ ಇಲ್ಲದಿದ್ದಲ್ಲಿ ನೀರನ್ನು ಇಂಗು ಗುಂಡಿಗೆ ಬಿಡಬಹುದು.
* ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ದನದ ಕೊಟ್ಟಿಗೆಯ ಸುತ್ತಲೂ ಗೋಡೆಯನ್ನು ಕಟ್ಟಬೇಕಾಗುತ್ತದೆ.
* ಈ ಕೊಟ್ಟಿಗೆಯನ್ನ ನಿರ್ಮಾಣ ಮಾಡಲು ಸಾಮಾನ್ಯವಾಗಿ 22,000ರೂ.ಗಳ ಖರ್ಚು ಬರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಒಟ್ಟು ಸಹಾಯಧನ 43,000ರೂ.ಗಳು ಬರುತ್ತದೆ.
ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನ ಹೆಚ್ಚಳ ಮಾಡಿದ ನಂತರ ಒಟ್ಟು ಸಹಾಯಧನವಾಗಿ 57,000 ರೂ ಸಿಗುತ್ತದೆ. ಈ ಮೊತ್ತವನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೂ ಸಮವಾಗಿ ನೀಡಲಾಗುತ್ತದೆ. ಈ ಮೊತ್ತದಲ್ಲಿ ಅಂದರೆ ಒಟ್ಟಾರೆ 57,000ರೂ.ಗಳಲ್ಲಿ ಸರಿ ಸುಮಾರು 10,556ರೂ.ಗಳನ್ನು ಕೂಲಿ ಮೊತ್ತವಾಗಿ ಈ ಯೋಜನೆಯಡಿ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಸುಮಾರು 46,644ರೂ.ಗಳನ್ನು ಈ ಯೋಜನೆಯಡಿಯಲ್ಲಿ ದನದ ಕೊಟ್ಟಿಗೆ ಅಥವಾ ದನದಶೆಡ್ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಈ ಯೋಜನೆಯ ಅಡಿಯಲ್ಲಿ ಸಹಾಯಧನ ನೀಡಲಾಗುತ್ತದೆ.
ಫಲಾನುಭವಿಗಳು ಜಾನುವಾರು ಶೆಡ್ ಅಥವಾ ಕೊಟ್ಟಿಗೆಯನ್ನು ನಿರ್ಮಿಸಿಕೊಳ್ಳಲು,
#ಕನಿಷ್ಠ 4 ಜಾನುವಾರುಗಳನ್ನು ಹೊಂದಿರಬೇಕು.
#ಸಂಬಂಧಪಟ್ಟ ಪಶುವೈದ್ಯಾಧಿಕಾರಿಗಳಿಂದ ಜಾನುವಾರು ಇರುವ ಕುರಿತ ದೃಢೀಕರಣ ಪತ್ರವನ್ನು ಪಡೆಯಬೇಕು.
#ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಉದ್ಯೋಗ ಖಾತರಿ ಚೀಟಿ ಪುಸ್ತಕವನ್ನು ಹೊಂದಿರಬೇಕು.
#ಈ ಮೇಲಿನ ಉಲ್ಲೇಕಿಸಿದ ದಾಖಲಾತಿಗಳೊಂದಿಗೆ ಸ್ಥಳೀಯ ಗ್ರಾಮ ಪಂಚಾಯತಿಗೆ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
# ಗ್ರಾಮ ಪಂಚಾಯಿತಿಯವರ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಫಲಾನುಭವಿಯ ಹೆಸರು ಸೇರಿಸಿಕೊಂಡು ಮೇಲಾಧಿಕಾರಿಗಳಿಂದ ಅನುಮೋದನೆ ಪಡೆದ ನಂತರ ರೈತರು ಅವರ ದನದ ಕೊಟ್ಟಿಗೆಯ ಕಾಮಗಾರಿಯನ್ನು ಪ್ರಾರಂಭಿಸಬೇಕು.
# ಈ ಹಿಂದೆ ಉದ್ಯೋಗ ಖಾತರಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 43,000ರೂ.ಗಳ ಸಹಾಯಧನ ಹಾಗೂ ಸಾಮಾನ್ಯ ವರ್ಗದವರಿಗೆ 19,000 ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನೀಡಲಾಗುತ್ತಿತ್ತು.
ಈ ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚಿಸಿದ ಸಹಾಯಧನದ ಬಗ್ಗೆ ತಿಳಿಯಬೇಕೆಂದರೆ,
ಸಾಮಾನ್ಯ ವರ್ಗದವರಿಗೂ ಸಹ 57,000ರೂ.ಗಳ ಸಹಾಯಧನ ಈ ಯೋಜನೆ ಅಡಿಯಲ್ಲಿ ನೀಡಲಾಗುವುದು. ಸಾಮಾನ್ಯವಾಗಿ 4 ಕ್ಕಿಂತ ಹೆಚ್ಚು ಜಾನುವಾರು ಸಾಕಣೆ ಮಾಡುವವರು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.
ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಜಾನುವಾರು ಸೆಡ್ ನಿರ್ಮಾಣಕ್ಕೆ ಸಹಾಯಧನದ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ರಾಜ್ಯದಲ್ಲಿ ಈ ಯೋಜನೆಯ ಲಾಭವನ್ನು ಪಡೆದುಕೊಂಡು ಸಹಸ್ರಾರು ಕುಟುಂಬಗಳು ಶೆಡ್ ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡು ಜಾನುವಾರು ಸಾಕಣೆಯೊಂದಿಗೆ ಉತ್ತಮ ಆದಾಯ ಮಾಡಿಕೊಳ್ಳುತ್ತಿದ್ದಾರೆ.
ಇದೀಗ ದನದ ಶೆಡ್ ನಿರ್ಮಾಣ ಮಾಡಿಕೊಳ್ಳಲು ಸಹಾಯ ಧನ ಹೆಚ್ಚಿಸಿದೆ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಅಥವಾ ಸಂಬಂಧಪಟ್ಟ ಪಂಚಾಯಿತಿಯನ್ನು ಸಂಪರ್ಕಿಸಿರಿ.
]]>
ರೈತರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ಪೋಡಿ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ರಾಜ್ಯ ಸರ್ಕಾರವು ಅವಕಾಶ ನೀಡಲಾಗುತ್ತಿದೆ. ನೀವು ಪೋಡಿ ನಕ್ಷೆಯನ್ನು ಕುಳಿತಲ್ಲೇ ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಹಂತಗಳನ್ನು ಅನುಸರಿಸಿ.
ಡಿಜಿಟಲ್ ಆಯಪ್ ಮುಖಾಂತರ ಮಾಡುವುದರಿಂದ ಸರಳ, ವೇಗವಾಗಿ ಕಡತಗಳನ್ನು ತಯಾರಿಸಬಹುದು.
ಯಾರ ಬಳಿ ವಿಳಂಬವಾಗಿದೆ ಎಂಬುದು ಪಾರದರ್ಶಕವಿರುವುದರಿಂದ, ವೇಗವಾಗಿ ಕೆಲಸವಾಗಬಹುದು. ಮೂಲ ಮಂಜೂರಿ ದಾಖಲೆಗಳನ್ನು ಸುರಕ್ಷಿತವಾಗಿಡಬಹುದು. ಮುಂದೆ ತಿದ್ದಲು, ನಕಲು ಮಾಡಲು ಸಾಧ್ಯವಿಲ್ಲ. ಒಬ್ಬ ರೈತನಿಗೆ ತಯಾರು ಮಾಡಿದ 1-5 (ನಮೂನೆ)ಕಡತ, ಆ ಸರ್ವೆ ನಂಬರಿನ ಎಲ್ಲಾ ರೈತರಿಗೂ ಅದೇ ಕಡತ ಅನುಕೂಲವಾಗುತ್ತದೆ. 1-5(ನಮೂನೆ)ಕಡತ ಕಾಣೆಯಾಗಲು ಅಥವಾ ಕಳೆದು ಹೋಗಲು ಸಾಧ್ಯವಿಲ್ಲ.
ಕುಟುಂಬದ ಸದಸ್ಯರ ಪಾಲುಗಾರಿಕೆ, ಭೂ ಆಸ್ತಿಯ ಕೆಲವು ಭಾಗ ಮಾರಾಟ, ದಾನಪತ್ರ, ನಿವೇಶನಕ್ಕೆ ಬಳಕೆ, ಭೂ ಪರಿವರ್ತನೆ ಸೇರಿ ಹಲವು ಚಟುವಟಿಕೆಗಳಿಗೆ ಪೋಡಿ ನಕ್ಷೆ ಅವಶ್ಯಕವಾಗಿದೆ. ಒಂದು ಸರ್ವೇ ನಂಬರಿನಲ್ಲಿ ಹಲವರ ಹೆಸರಿದ್ದರೆ ಮುಂದೆ ಸರ್ಕಾರದಿಂದ ಸೌಲಭ್ಯ ಪಡೆಯುವುದಕ್ಕೆ ತೊಂದರಯಾಗುತ್ತದೆ. ಜೊತೆಗೆ ಜಮೀನು ಮಾರಾಟ ಸಂದರ್ಭದಲ್ಲಿಯೂ ತೊಡಕಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ರಾಜ್ಯ ಸರ್ಕಾರವು ಮೊಬೈಲ್ ನಲ್ಲೇ ಪೋಡಿ ನಕ್ಷೆ ಪಡೆಯುವ ಹೊಸ ತಂತ್ರಾಂಶವನ್ನು ಬಿಡುಗಡೆಮಾಡಿದೆ.
ಪೋಡಿ ನಕ್ಷೆ ಮಾಡಿಸುವುದಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವುದಕ್ಕಾಗಿ ಸರ್ಕಾರವು ಈಗ ಆನ್ಲೈನ್ ವ್ಯವಸ್ಥೆಯನ್ನು ಮಾಡಿದೆ. ರೈತರು ಸ್ವತಃ ಅವರೆ ಮೊಬೈಲ್ ನಲ್ಲಿ ಜಮೀನಿನ ಪೋಡಿ ನಕ್ಷೆ ತಯಾರಿಸಿಕೊಳ್ಳಬಹುದು. ಸಹೋದರರು, ಸಂಬಂಧಿಕರು ಮನೆಯಲ್ಲಿಯೇ ಕುಳಿತು ತಮ್ಮ ಜಮೀನಿನ ಭಾಗ ಮಾಡಿಕೊಳ್ಳಲು ಇದು ಅವಕಾಶ ಕಲ್ಪಿಸಿದೆ.
ಈ ರೀತಿಯಾಗಿ ಮೊಬೈಲ್ ನಲ್ಲಿ ಪೋಡಿ ನಕ್ಷೆ ಪಡೆಯಬಹುದು
ಮೊದಲು ಅಧಿಕೃತ ವೆಬ್ ಸೈಟ್ https://bhoomojini.karnataka.gov.in/Service27 ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಭೂ ಕಂದಾಯ ಇಲಾಖೆಯ ಮೋಜಿನಿ ಆನ್ಲೈನ್ ಪೇಜ್ ಓಪನ್ ಆಗುತ್ತದೆ.
ನಂತರ ರೈತರು ಮೊಬೈಲ್ ನಂಬರ್ ಹಾಕಿ ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು.
ನಂತರ ಮೊಬೈಲ್ ಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.
ನಂತರ ಎಡಭಾಗದಲ್ಲಿರುವ 3 ಅಡ್ಡ ಗೆರೆಗಳ ಮೇಲೆ ಕ್ಲಿಕ್ ಮಾಡಿ ಹೊಸ ಅರ್ಜಿ/New application ಮೇಲೆ ಕ್ಲಿಕ್ ಮಾಡಿ
ನಂತರ "ನಾನೇ ಸ್ಕೇಚ್ ಸಿದ್ದಪಡಿಸಿ ಅಪ್ಲೋಡ್ ಮಾಡುತ್ತೇನೆ" ಮೇಲೆ ಕ್ಲಿಕ್ ಮಾಡಿ
ನಂತರ ಅರ್ಜಿಯ ವಿಧ "ತತ್ಕಾಲ ಪೋಡಿ" select ಮಾಡಿ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಬೇಕು. ಆಧಾರ್ ಕಾರ್ಡ್ ನಲ್ಲಿರುವ ಹೆಸರನ್ನು ನಮೂದಿಸಿ Next ಮೇಲೆ ಕ್ಲಿಕ್ ಮಾಡಿ
ಪ್ರಕ್ರಿಯೆ ಪೂರ್ಣಗೊಳಿಸಿದರೆ ಈ ಕೆಳಗಿನಂತೆ ನಿಮ್ಮ ಪೋಡಿ ನಕ್ಷೆ ಸಿಗುತ್ತದೆ.
Kalu dari-ನಿಮ್ಮ ಜಮೀನಿಗೆ ಹೊಗಲು ಯಾರಾದರೂ ದಾರಿ ಬಿಡದಿದ್ದರೆ ಹೀಗೆ ಮಾಡಿ,ನಿಮ್ಮ ಗ್ರಾಮದ ಕಾಲು ದಾರಿ,ಬಂಡಿ ಜಾಡು ಇರುವ ಗ್ರಾಮನಕ್ಷೆ ಡೌನ್ಲೊಡ್ ಮಾಡಿಕೊಳ್ಳಿ-Village map - https://krushirushi.in/Kali-Dari-village-map-1769
]]>
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆಗೆ(PMKMY) ಜಾರ್ಖಂಡ್ನ ರಾಂಚಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಇದು ಕೇಂದ್ರ ವಲಯದ ಯೋಜನೆಯಾಗಿದ್ದು, ಇದು ಸಹಕಾರ ಮತ್ತು ರೈತರ ಕಲ್ಯಾಣ, ಕೃಷಿ ಇಲಾಖೆ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಮತ್ತು ಭಾರತ ಸರ್ಕಾರವು ಭಾರತೀಯ ಜೀವ ವಿಮಾ ನಿಗಮದ (LIC) ಸಹಭಾಗಿತ್ವದಲ್ಲಿ ನಿರ್ವಹಿಸುತ್ತದೆ.
ಎಲ್ಐಸಿ ಪಿಎಂ ಕಿಸಾನ್ ಮಾನ್-ಧನ್ ಯೋಜನೆಗೆ(Pradan mantri kisan mandhan yojane) ಪಿಂಚಣಿ ನಿಧಿ ನಿರ್ವಾಹಕರಾಗಿದ್ದು, ಇದು ರೂ.ಗಳ ಖಚಿತವಾದ ಮಾಸಿಕ ಪಿಂಚಣಿಯನ್ನು ಒದಗಿಸುತ್ತದೆ. 3000/- ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ( 2 ಹೆಕ್ಟೇರ್ ವರೆಗೆ ಸಾಗುವಳಿ ಭೂಮಿಯನ್ನು ಹೊಂದಿರುವವರು ) 60 ವರ್ಷ ವಯಸ್ಸಿನ ನಂತರ . ಭಾರತದಲ್ಲಿನ ಸಣ್ಣ ಮತ್ತು ಅತಿ ಸಣ್ಣ ರೈತರ ಜೀವನವನ್ನು ಸುರಕ್ಷಿತಗೊಳಿಸುವ ಉದ್ದೇಶದಿಂದ ಈ ಯೋಜನೆಯನ್ನು ಪರಿಚಯಿಸಲಾಗಿದೆ.
ಭಾರತದಲ್ಲಿ PM-KMY ಯೋಜನೆಯು 18 ರಿಂದ 40 ವರ್ಷ ವಯಸ್ಸಿನ ರೈತರಿಗೆ ಕೇಂದ್ರ ವಲಯದ ಯೋಜನೆಯಾಗಿದೆ . ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ನಿರ್ವಹಿಸುವ ಪಿಂಚಣಿ ನಿಧಿಯ ಅಡಿಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಫಲಾನುಭವಿಯು PM-KMY ಯೋಜನೆಯ ಸದಸ್ಯರಾಗಬಹುದು. ಹೀಗೆ ಸದಸ್ಯರು ತಮ್ಮ ವಯಸ್ಸಿಗೆ ಅನುಗುಣವಾಗಿ ಕೇಂದ್ರ ಸರ್ಕಾರದಿಂದ ಸಮಾನ ಕೊಡುಗೆಯನ್ನು ಒದಗಿಸುವುದರೊಂದಿಗೆ ಪಿಂಚಣಿ ನಿಧಿಗೆ ರೂ.55/- ರಿಂದ ರೂ.200/- ರ ನಡುವೆ ಮಾಸಿಕ ಕೊಡುಗೆಯನ್ನು ನೀಡಬೇಕಾಗುತ್ತದೆ. ನವೆಂಬರ್ 14, 2019 ರ ವರದಿಗಳ ಪ್ರಕಾರ, ಭಾರತದಲ್ಲಿ ಒಟ್ಟು 18,29,469 ರೈತರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಈ ಯೋಜನೆಯು ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನ್ವಯಿಸುತ್ತದೆ . ಈ ಯೋಜನೆಯ ಅಡಿಯಲ್ಲಿ ಅವರು ಮತ್ತು ಕೇಂದ್ರ ಸರ್ಕಾರದಿಂದ ನೀಡಬೇಕಾದ ಕೊಡುಗೆಯ ಅನುಪಾತವು 1:1 ಆಗಿದೆ. PM-KMY ಯೋಜನೆಯಡಿ ಸರ್ಕಾರದ ಕೊಡುಗೆಯು ರೈತರು ನೀಡುವ ಮಾಸಿಕ ಕೊಡುಗೆಗೆ ಸಮಾನವಾಗಿರುತ್ತದೆ.
ಸಂಬಂಧಿತ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಭೂ ದಾಖಲೆಗಳ ಪ್ರಕಾರ ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರು ( 2 ಹೆಕ್ಟೇರ್ಗಳವರೆಗೆ ಸಾಗುವಳಿ ಭೂಮಿಯನ್ನು ಹೊಂದಿದ್ದಾರೆ ) ಮತ್ತು 18 ವರ್ಷದಿಂದ 40 ವರ್ಷ ವಯಸ್ಸಿನವರು ಪ್ರಧಾನ ಮಂತ್ರಿ ಕಿಸಾನ್ ಮಾನ್-ಧನ್ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಮತ್ತು ಈ ಯೋಜನೆಯ ಎಲ್ಲಾ ಪ್ರಯೋಜನಗಳನ್ನು ಪಡೆಯಬಹುದು.
ಹೊರಗಿಡುವ ಮಾನದಂಡದ ವ್ಯಾಪ್ತಿಯೊಳಗೆ ಬರುವ ರೈತರು ಪ್ರಯೋಜನಕ್ಕೆ ಅರ್ಹರಲ್ಲ.
ಆದಾಗ್ಯೂ, ಈ ಕೆಳಗಿನ ಮಾನದಂಡಗಳ ಅಡಿಯಲ್ಲಿ ಬರುವ ರೈತರು ಯೋಜನೆಗೆ ಅರ್ಹರಾಗಿರುವುದಿಲ್ಲ :
1.ರಾಷ್ಟ್ರೀಯ ಪಿಂಚಣಿ ಯೋಜನೆ (NPS), ನೌಕರರ ರಾಜ್ಯ ವಿಮಾ ನಿಗಮ ಯೋಜನೆ, ಉದ್ಯೋಗಿಗಳ ನಿಧಿ ಸಂಸ್ಥೆ ಯೋಜನೆ ಇತ್ಯಾದಿಗಳಂತಹ ಇತರ ಯೋಜನೆಗಳ ಅಡಿಯಲ್ಲಿ ಈಗಾಗಲೇ ನೋಂದಾಯಿಸಲ್ಪಟ್ಟಿರುವ ಸಣ್ಣ ಮತ್ತು ಅತಿ ಸಣ್ಣ ರೈತರು PM-KMY ಯೋಜನೆಗೆ ಅರ್ಹರಾಗಿರುವುದಿಲ್ಲ.
2.ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ನಿರ್ವಹಿಸುವ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ (PMSYM) ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಪ್ರಧಾನ ಮಂತ್ರಿ ಲಘು ವ್ಯಾಪಾರಿ ಮಾನ್-ಧನ್ ಯೋಜನೆ (PM-LVM) ಗಾಗಿ ಆಯ್ಕೆ ಮಾಡಿದ ರೈತರು ಸಹ ಅಲ್ಲ ಈ ಯೋಜನೆಗೆ ಅರ್ಹರು.
PM-KMY ಯೋಜನೆಯ ಪ್ರಯೋಜನಗಳು
ಫಲಾನುಭವಿಯೊಂದಿಗೆ, ಸಂಗಾತಿಯು ಸಹ ಯೋಜನೆಗೆ ಅರ್ಹರಾಗಿದ್ದಾರೆ ಮತ್ತು ನಿಧಿಗೆ ಪ್ರತ್ಯೇಕ ಕೊಡುಗೆಗಳನ್ನು ನೀಡುವ ಮೂಲಕ ರೂ.3000/- ಗಳ ಪ್ರತ್ಯೇಕ ಪಿಂಚಣಿ ಪಡೆಯಬಹುದು.
ನಿವೃತ್ತಿಯ ದಿನಾಂಕದ ಮೊದಲು ಫಲಾನುಭವಿಯು ಮರಣಹೊಂದಿದರೆ, ಉಳಿದ ಕೊಡುಗೆಗಳನ್ನು ಪಾವತಿಸುವ ಮೂಲಕ ಸಂಗಾತಿಯು ಈ ಯೋಜನೆಯನ್ನು ಮುಂದುವರಿಸಬಹುದು. ಆದರೆ ಸಂಗಾತಿಯು ಮುಂದುವರಿಯಲು ಬಯಸದಿದ್ದರೆ, ಬಡ್ಡಿಯೊಂದಿಗೆ ರೈತರು ನೀಡಿದ ಒಟ್ಟು ಕೊಡುಗೆಯನ್ನು ಸಂಗಾತಿಗೆ ಪಾವತಿಸಲಾಗುತ್ತದೆ.
ಸಂಗಾತಿಯಿಲ್ಲದಿದ್ದರೆ, ಬಡ್ಡಿಯೊಂದಿಗೆ ಒಟ್ಟು ಕೊಡುಗೆಯನ್ನು ನಾಮಿನಿಗೆ ಪಾವತಿಸಲಾಗುತ್ತದೆ.
ನಿವೃತ್ತಿ ದಿನಾಂಕದ ನಂತರ ರೈತರು ಮರಣಹೊಂದಿದರೆ, ಸಂಗಾತಿಯು ಪಿಂಚಣಿಯ 50% ಅನ್ನು ಕುಟುಂಬ ಪಿಂಚಣಿಯಾಗಿ ಪಡೆಯುತ್ತಾರೆ. ರೈತ ಮತ್ತು ಸಂಗಾತಿಯ ಮರಣದ ನಂತರ, ಸಂಗ್ರಹವಾದ ಕಾರ್ಪಸ್ ಅನ್ನು ಪಿಂಚಣಿ ನಿಧಿಗೆ ಹಿಂತಿರುಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/Documents/PM-KMY%20-%20Salient%20Features.pdf
]]>ರಸ್ತೆಗಳು ಎಂಬ ಪರಿಕಲ್ಪನೆಯಲ್ಲಿ ಕಾಲುದಾರಿ(Kalu Dari),
ಬಂಡಿ ಜಾಡು(Bandi jadu)ಕೂಡಾ ಒಳಗೊಂಡಿರುತ್ತವೆ' ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಭೂಸ್ವಾಧೀನ ಕಾಯ್ದೆಯಡಿ ಜಮೀಣು ಸ್ವಾಧೀನಪಡಿಸಿಕೊಂಡ ಮಾತ್ರಕ್ಕೆ 'ಬಿ ಖರಾಬ್' ಭೂಮಿಯಲ್ಲಿ ಸಾರ್ವಜನಿಕರ ಹಕ್ಕನ್ನು ರದ್ದುಪಡಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
'ಕರ್ನಾಟಕ ಭೂ ಕಂದಾಯ ಕಾಯ್ದೆ-1964ರ ಕಲಂ 67ರ ಪ್ರಕಾರ ಎಲ್ಲಾ ಸಾರ್ವಜನಿಕ ರಸ್ತೆಗಳು, ಬೀದಿಗಳು, ಓಣಿಗಳು, ಪಥಗಳು, ಸೇತುವೆಗಳು, ಕಂದಕಗಳು, ತಡೆಗೋಡೆಗಳು ಮತ್ತು ಬೇಲಿಗಳು ಸರ್ಕಾರಕ್ಕೆ ಸೇರಿವೆ ಎಂದು ಸೂಚಿಸುತ್ತದೆ. ಕಾಲುದಾರಿ(Klaudari) ಅಥವಾ ಬಂಡಿ ಜಾಡು (Bandi jadu)ಎಂಬ ಗಾಡಿ ಜಾಡು ಈ ಹಿಂದೆ ಕರೆಯಲಾಗುತ್ತಿದ್ದ ರಸ್ತೆಗಳೆನಿಸಿವೆ' ಎಂದು ನ್ಯಾಯಪೀಠ ಹೇಳಿದೆ.
'ಕಾಲುದಾರಿ, ಬಂಡಿ ಜಾಡು ಸ್ಥಳವನ್ನು ಗ್ರಾಮದ ನಕ್ಷೆಯಲ್ಲಿ(Village map) ಮತ್ತು ಸಂಬಂಧಿತ ಕಂದಾಯ ದಾಖಲೆಗಳಲ್ಲಿ ಗುರುತಿಸಲಾಗಿದೆ. ಭೂಮಾಲೀಕರಿಗೆ ಸಂಬಂಧಿಸಿದಂತೆ ಈ ಭಾಗವನ್ನು 'ಬಿ ಖರಾಬ್' ಎಂದು ವರ್ಗೀಕರಿಸಲಾಗಿದೆ. ಈ ಜಮೀನುಗಳು ಸರ್ಕಾರಕ್ಕೆ ಸೇರಿದ್ದರೂ, ಸಾರ್ವಜನಿಕರ ಹಕ್ಕನ್ನೂ ನೀಡಲಾಗಿರುತ್ತದೆ' ಎಂದು ನ್ಯಾಯಪೀಠ ತಿಳಿಸಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆಯ ಕಲಂ 68ರ ಪ್ರಕಾರ 'ಬಿ
ಖರಾಬ್'ನಲ್ಲಿ ಸಾರ್ವಜನಿಕರ ಹಕ್ಕನ್ನು ಕಸಿದುಕೊಳ್ಳಲಾಗಿಲ್ಲ. ಈ ಸ್ಥಳದ ಮತ್ತು ಸುತ್ತಮುತ್ತಲಿನ ಎಲ್ಲಾ ಗ್ರಾಮಸ್ಥರು ಅಥವಾ ಸಾರ್ವಜನಿಕರು ಕಾಲುದಾರಿ ಬಳಸಲು ಅರ್ಹರಾಗಿರುತ್ತಾರೆ. ಹಾಗಾಗಿ, ಅರ್ಜಿದಾರರು ಈ ಭೂಮಿಯನ್ನು ಮೀಸಲಿಡಬೇಕಾಗಿತ್ತು ಮತ್ತು ಅದನ್ನು ಮಾರುಕಟ್ಟೆ ಪ್ರಾಂಗಣದ ಉದ್ದೇಶಗಳಿಗಾಗಿ ಬಳಸಬಾರದು' ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.
ರೈತರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯಿಲ್ಲದೆ ಸಾಕಷ್ಟು ಕಷ್ಟ ಪಡುತ್ತಿರುತ್ತಾರೆ. ಜಮೀನು ಹತ್ತಿರವೇ ಇರುತ್ತದೆ. ಆದರೆ ಎತ್ತಿನ ಬಂಡಿ ಹೋಗುವ ದಾರಿಯಿಲ್ಲದೆ ಬಹಳಷ್ಟು ತೊಂದರೆ ಅನುಭವಿಸುತ್ತಿರುತ್ತಾರೆ. ಅದಲ್ಲದೆ ಆದರೆ ಕೆಲವರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯೇ ಇಲ್ಲ.
ಅಕ್ಕಪಕ್ಕದ ಜಮೀನುಗಳಿಗೆ ದಾರಿ ಮಾಡಿಕೊಡದೆ ತೊಂದರೆ ಕೊಡುತ್ತಾರೆ.ಆದರೆ ಸರ್ಕಾರ ಈ ಕುರಿತು ಹೊಸ ನಿಯಮಾವಳಿಗಳನ್ನು ಹೊರಡಿಸಿದೆ. ನೀವು ಭೂಮಿಯನ್ನು ಹೊಂದಿರುವಾಗ ಜಮೀನಿನಲ್ಲಿ ಕೃಷಿ ಕಾರ್ಯಾಚರಣೆಗಳು ಎಷ್ಟು ಮುಖ್ಯವೋ, ಕ್ಷೇತ್ರಕ್ಕೆ ಪ್ರವೇಶವನ್ನು ಖಚಿತಪಡಿಸಿಕೊಳ್ಳುವುದು ಅಷ್ಟೇ ಮುಖ್ಯ.
ರೈತರು ತಮ್ಮ ಕೃಷಿ ಪರಿಕರಗಳನ್ನು ಜಮೀನಿಗೆ ಒಯ್ಯಬೇಕು. ಆದರೆ ಸರಿಯಾದ ದಾರಿ ಇಲ್ಲದಿದ್ದರೆ ಸಾಧ್ಯವಿಲ್ಲ. ಅಕ್ಕಪಕ್ಕದ ರೈತರನ್ನು ದಾರಿ ಕೇಳಿದರೆ ಅವರು ನಿರಾಕರಿಸುತ್ತಾರೆ. ತೊಂದರೆ ಕೊಡಲು ಪ್ರಯತ್ನಿಸುತ್ತಾರೆ. ಇಂತಹ ಸಮಯದಲ್ಲಿ ನೀವು ಕಾನೂನಿನ ಆಶ್ರಯವನ್ನು ತೆಗೆದುಕೊಳ್ಳಬಹುದು. ಈ ಕಾಯಿದೆಯ ಮೂಲಕ ನಿಮ್ಮ ಭೂಮಿಗೆ ಪ್ರವೇಶವನ್ನು ಮಾಡಬಹುದು. ಜಮೀನಿನ ದಾರಿಯ ಬಗ್ಗೆ ಕಾನೂನು ವ್ಯವಸ್ಥೆಯಲ್ಲಿ ಕಾನೂನುಗಳಿವೆ.
ಸರಾಗಗೊಳಿಸುವ ಕಾಯಿದೆಯು ಅವಶ್ಯಕತೆಯ ಸುಲಭತೆಯನ್ನು ಸೂಚಿಸುತ್ತದೆ. ಕಾನೂನಿನ ನಿಯಮದ ಪ್ರಕಾರ.. ಯಾವುದೇ ಕ್ಷೇತ್ರವು ಮತ್ತೊಂದು ಕ್ಷೇತ್ರದ ಮುಂದೆ ಇರುವಾಗ ಹಿಂಬದಿ ಕ್ಷೇತ್ರಕ್ಕೆ ಬಿಟ್ಟುಕೊಡಬೇಕು ಇಲ್ಲದಿದ್ದರೆ ಪ್ರಕರಣ ದಾಖಲಿಸಬಹುದು. ಸರಾಗ ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕಾದ ಇನ್ನೊಂದು ಮುಖ್ಯ ವಿಷಯವೆಂದರೆ ಈ ಹಿಂದೆ ಆ ಜಮೀನಿಗೆ ರಸ್ತೆ ಇದ್ದು, ಈಗ ಅದು ಮುಚ್ಚಿದ್ದರೆ ನೀವು ಅದರ ಬಗ್ಗೆ ಕೇಸ್ ದಾಖಲಿಸಬಹುದು. ಬೇರೆ ಜಮೀನಿಗೆ ಹೋಗಬೇಕಾದರೆ ದಾರಿ ಬಿಡಬೇಕು. ಇಲ್ಲದಿದ್ದರೆ ನೊಂದ ರೈತರು ಪ್ರಕರಣ ದಾಖಲಿಸಬಹುದು. ಟೆನೆನ್ಸಿ ಆಕ್ಟ್ನ ಸೆಕ್ಷನ್ 251 ನಿಮ್ಮ ಫಾರ್ಮ್ಗೆ ಹೋಗುವ ಹೊಸ ರಸ್ತೆಯನ್ನು ನಿರ್ಮಿಸಲು ನಿಮಗೆ ಅನುಮತಿಸುತ್ತದೆ.
Village map-ನಿಮ್ಮ ಊರಿನ ಕಾಲುದಾರಿ,ಬಂಡಿದಾರಿ ತಿಳಿಯುವ ಡೈರೆಕ್ಟ್ ಲಿಂಕ್
https://landrecords.karnataka.gov.in/indexkn.aspx
ನಂತರ ಕಂದಾಯ ನಕ್ಷೆಗಳು ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೋಬಳಿ,ಗ್ರಾಮ select ಮಾಡಿ, search ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ ಗ್ರಾಮದ ಹೆಸರು ಕಾಣೆಸುತ್ತದೆ. ಆಗ ನಿಮ್ಮ ಗ್ರಾಮದ ಮುಂದಿರುವ pdf file ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದ ನಕ್ಷೆ ಕಾಣೆಸುತ್ತದೆ. ಅದರಲ್ಲಿ ಕಾಲುದಾರಿ,ಬಂಡಿದಾರಿ,ಕೆರೆ ಕಟ್ಟೆಯನ್ನು ನೋಡಬಹುದು.
ಶುಂಠಿ ಬೆಳೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಬೆಳೆವಿಮೆ(Belevime hana jama)ಹಣ ಜಮಾ ಮಾಡಲಾಗುತ್ತಿದ್ದು,ಕಳೆದ ಎರಡು ದಿನಗಳಿಂದ ಎಕರೆಗೆ 37,300 ರೂಪಾಯಿಯಂತೆ ರೈತರ ಖಾತೆಗೆ ಜಮಾ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ (Bele vime status)ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಮಾಜಿ ಪ್ರಧಾನಿ ಮನಮೋಹನಸಿಂಗ್(Manmohan Singh) ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ (ಡಿ.27)ರಂದು ಸರ್ಕಾರಿ ರಜೆ ಘೋಷಿಸಲಾಗಿದೆ.
ಅಧಿಸೂಚನೆ
ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಇವರ ನಿಧನಕ್ಕೆ ರಾಜ್ಯ ಸರ್ಕಾರವು ತೀವು ಸಂತಾಪ ವ್ಯಕ್ತಪಡಿಸುತ್ತದೆ.
ದಿವಂಗತರ ಗೌರವಾರ್ಥವಾಗಿ ದಿನಾಂಕ:27.12.2024 ರಂದು ಶುಕ್ರವಾರ ರಾಜ್ಯದಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಿದೆ. ದಿನಾಂಕ:26.12.2024 ರಿಂದ ದಿನಾಂಕ:01.01.2025 ರವರೆಗೆ (ಎರಡು ದಿನಗಳು ಸೇರಿದಂತೆ) ಏಳು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು.
ಸದರಿ ಆದೇಶವು ನೆಗೋಷಿಯಬಲ್ ಇನ್ಸುಮೆಂಟ್ ಆಕ್ಟ್ 1881 ರ ಪ್ರಕಾರವು ಕೂಡಾ ಸಾರ್ವಜನಿಕ ರಜೆಯೆಂದು ಘೋಷಿಸಲಾಗಿದೆ.
ಫ್ರುಟ್ಸ್ ನಲ್ಲಿ(FRUITS) ನೊಂದಣಿ ಮಾಡಿಕೊಳ್ಳದೇ ಇರುವ ರೈತರು ಕೂಡಲೆ ಫ್ರುಟ್ಸ್ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೆ ಫ್ರುಟ್ಸ್ನಲ್ಲಿ ನೊಂದಣಿ ಮಾಡಿಸಿಕೊಂಡವರು ಎಲ್ಲಾ ಸರ್ವೆ ನಂಬರ್(Survey number) ಗಳನ್ನು ನಿಮ್ಮ FIDಗೆ ಲಿಂಕ್ ಮಾಡಬೇಕು, ಅಂದರೆ ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 01 ಎಕರೆ ಮಾತ್ರ ನಮೂದಿಸಿರುತ್ತಾರೆ, ಅಂತಹವರಿಗೆ ಕೇವಲ 01 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ, ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ಪಹಣಿಯ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ (FRUITS) ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ(bele parihara) ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ ಪಾವತಿಯಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ (FRUITS)ನಲ್ಲಿ ನೊಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ನಿಮ್ಮ FID ಗೆ ಎಷ್ಟು ಸರ್ವೆ ನಂಬರ್ ಲಿಂಕ್ ಆಗಿದೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್(Aadhaar number) ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ password create ಮಾಡಿ
Mobile number,Create ಮಾಡಿದ password ಹಾಗೂ captcha code ಹಾಕಿ ಲಾಗಿನ್ ಮಾಡಿ
ನಂತರ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, Search ಮೇಲೆ ಕ್ಲಿಕ್ ಮಾಡಿ
ನಂತರ Registration status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ FIDಗೆ ಯಾವ ಯಾವ ಸರ್ವೆ ನಂಬರ್(Survey number) ಗಳನ್ನು ಸೇರಿಸಲಾಗಿದೆ ಎಂದು ತೋರಿಸುತ್ತದೆ
ನಿಮ್ಮ ಸರ್ವೆ ನಂಬರ್(Survey number) ಗಳು ನಿಮ್ಮ FIDಯಲ್ಲಿ ಸೇರಿಸದಿದ್ದರೆ,ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಬೇಟಿ ಕೊಟ್ಟು ನಿಮ್ಮ ಎಲ್ಲಾ ಸರ್ವೆ ನಂಬರ್ ಗಳನ್ನು ಸೇರಿಸಿಕೊಳ್ಳಿ.
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಡಿಸೆಂಬರ್ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ-Aadhaar not linked croploss farmers list - https://krushirushi.in/Aadhaar-not-linked-croploss-farmers-list-1636
'ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲಿ ಆಗಬೇಕಿತ್ತು. ಆದರೆ, 16.6 ಸೆಂ.ಮೀ (ಶೇ 61ರಷ್ಟು ಹೆಚ್ಚು) ಮಳೆ ಸುರಿದಿದೆ. ಅಂದಾಜು 56,993 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದೆ(Bele hani). ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ಇನ್ನು 3-4 ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, 15 ದಿನಗಳಲ್ಲಿ ಪರಿಹಾರ(Bele parihara) ವಿತರಿಸುತ್ತೇವೆ' ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಈ ಅವಧಿಯಲ್ಲಿ ಮಳೆಯಿಂದ ಸುಮಾರು 84 ಮನೆಗಳು ಸಂಪೂರ್ಣವಾಗಿ ಹಾನಿಗೆ ಒಳಗಾಗಿವೆ.ಇನ್ನು ರಾಜ್ಯದ ಹಲವು ಪ್ರದೇಶಗಳಲ್ಲಿ 2074 ಮನೆಗಳು ಭಾಗಶಹ ಹಾನಿ ಒಳಗಾಗಿವೆ. ಪೂರ್ತಿ ಮನೆ ಹಾನಿಗೆ 1.20 ಲಕ್ಷ ಪರಿಹಾರ ನೀಡಬೇಕು. ಜೊತೆಗೆ ಮನೆ ನಿರ್ಮಾಣ ಮಾಡಲು ಈಗಾಗಲೇ ಆದೇಶಿಸಲಾಗಿದೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಕುಡಿಯುವ ನೀರನ್ನು ಸಂಗ್ರಹಿಸಿ ಬೆಳೆಗೆ ನೀರು ಬಿಡಲು ಹೇಳಿದ್ದೇನೆ. ರಾಜ್ಯದ ಹಲವೆಡೆ ಅತಿವೃಷ್ಟಿಯಿಂದ 25 ಜನರು ಸಾವನ್ನಪ್ಪಿದ್ದಾರೆ. ಮಳೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.
ಮಳೆಯಿಂದ 9 ಸಾವಿರ ಹೆಕ್ಟರ್ ಕೃಷಿ ಜಮೀನು ಹಾಳಾಗಿದೆ. 50 ಸಾವಿರ ಹೆಕ್ಟರ್ ತೋಟಗಾರಿಕಾ ಪ್ರದೇಶ ಕೂಡ ಹಾನಿಯಾಗಿದೆ.ಈ ಬಗ್ಗೆ ಜಂಟಿ ಸರ್ವೆ ಮಾಡಿ ಒಂದು ವಾರದೊಳಗೆ ಸರ್ವೆ ವರದಿ ಸಲ್ಲಿಸುವಂತೆ ಸೂಚಿಸಿದ್ದೇನೆ ಎಂದು ಡಿಸಿ ಜಿಲ್ಲಾ ಪಂಚಾಯತ್ ಸಿಇಓ ಗಳ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ - https://krushirushi.in/Tahasildar-varification-status-approved-1634
]]>ರಾಜ್ಯದ 8.90 ಲಕ್ಷ ಹಾಲು ಉತ್ಪಾದಕರಿಗೆ ₹649.76 ಕೋಟಿ ಪ್ರೋತ್ಸಾಹಧನ ನೇರ ಖಾತೆಗೆ ಜಮೆ
Milk incentive status-ಇಲ್ಲಿಯವರೆಗೂ ಜಮಾ ಆಗಿರುವ ಹಾಲಿನ ಪ್ರೋತ್ಸಾಹಧನ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ "ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಪ್ರೋತ್ಸಾಹಧನ ಮಾಹಿತಿ ಸಿಗಲಿದೆ.
ಹೀಗೂ ಚೆಕ್ ಮಾಡಬಹುದು
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/Klda/MilkIncentive?ServiceId=5399&Type=TABLE&DepartmentId=3119
ನಂತರ ನಿಮ್ಮ ಜಿಲ್ಲೆ,ತಾಲೂಕು,Milk Union,ಗ್ರಾಮ, select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ನಿಮ್ಮ ಗ್ರಾಮದಲ್ಲಿ ಯಾರಿಗೆಲ್ಲಾ ಎಷ್ಟು ಹಾಲಿನ ಪ್ರೋತ್ಸಾಹಧನ(Milk incentive) ಬಂದಿದೆ ಎಂದು ತಿಳಿಯಲಿದೆ
ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ (FRUITS ID) ಪ್ರೊಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ(Parihara Portal) ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ(Direct benefit transfer) ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುದು.
ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.
ಬೆಳೆ ಹಾನಿ ಪರಿಹಾರ(Bele hani parihara) ಪಡೆದುಕೊಳ್ಳಲು (FRUITS ID) ಪ್ರೊಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೊಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ (FRUITS ID) ಪ್ರೊಟ್ಸ್ ಐಡಿ ಸೃಜಿಸಿಕೊಳ್ಳಬಹುದು. (FRUITS ID) ಪ್ರೊಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.
ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್/Aadhaar number ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ
ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಡಿಸೆಂಬರ್ 31 ರವರೆಗೆ ಅವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ.
ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.
ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http:// ahara.kar.nic.in ವೆಬ್ ಗಮನಿಸಬಹುದಾಗಿದೆ.
ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅನ್ನು ಹೊಂದಿರಬೇಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ. ಈ ಎರಡು ದಾಖಲೆಗಳು ಇದ್ದರೆ ನೀವು ಆನ್ನೈನ್ ಮುಖಾಂತರ ರೇಷನ್ ಕಾರ್ಡ್ನಲ್ಲಿ ನಿಮ್ಮ ಹೆಸರನ್ನು ಸೇರಿಸಬಹುದು.
ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ e-status ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ Amendment requests ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ಪಡಿತರ ಚೀಟಿಯ ಬದಲಾವಣೆ ಕೋರಿಕೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಅಥವಾ Acknowledgment ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ಆಹಾರ ಇಲಾಖೆಗೆ ಸಲ್ಲಿಸಲಾಗಿದೆ ಹಾಗೂ ಆಹಾರ ನೀರಿಕ್ಷರಿಂದ ಪ್ರಕ್ರಿಯೆಗೆ ಕಾಯುತ್ತಿದೆ ಎಂದು ತೋರಿಸಿದರೆ ನಿಮ್ಮ ತಿದ್ದುಪಡಿ ಅರ್ಜಿ ಇನ್ನೂ ಬಾಕಿ ಇದೆ ಎಂದು ಅರ್ಥ
ಈ ಕೆಳಗಿನಂತೆ ತೋರಿಸಿದರೆ ನಿಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಅರ್ಥ
(ಸೂಚನೆ-ಆಹಾರ ವೆಬ್ಲೈಟ್ ಓಪನ್ ಆಗದಿದ್ದರೆ,10 ಗಂಟೆಯ ನಂತರ ಪ್ರಯತ್ನಿಸಿ)
ಹಾವೇರಿ ಜಿಲ್ಲೆಯ ನಮ್ಮ ರೈತರಿಗೆ ಸಂತಸದ ಸುದ್ದಿ!
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ(Pradan mantri fasal bheema yojane) 2023-24ನೇ ಸಾಲಿನಲ್ಲಿ ಖಾಸಗಿ ವಿಮೆ ಸಂಸ್ಥೆಯವರು ಮುಂಗಾರು ಹಂಗಾಮಿನಲ್ಲಿ ಹಾವೇರಿ ಜಿಲ್ಲೆಯ ಬೆಳೆ ಕಟಾವು ಪ್ರಯೋಗಗಳ(Crop cutting experiment)ಸಂಬಂಧ ರಾಜ್ಯ ಸರ್ಕಾರದ ಸಮಿತಿಯ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರದ ತಾಂತ್ರಿಕ ಸಲಹಾ ಸಮಿತಿಗೆ ಮೇಲ್ಮನವಿ ಸಲ್ಲಿಸಿದ್ದರು.
ರಾಜ್ಯದಿಂದ ಪ್ರಬಲವಾದ ವಾದವನ್ನು ಮಂಡಿಸಿದ್ದ ಫಲಶ್ರುತಿಯಾಗಿ ಆಕ್ಷೇಪಣೆಗೊಳಗಾಗಿದ್ದ ಹಾವೇರಿ ಜಿಲ್ಲೆಯ ವಿಮಾ ಘಟಕಗಳಲ್ಲಿ ಸುಮಾರು 65000 ಅರ್ಹ ರೈತ ಫಲಾನುಭವಿಗಳಿಗೆ ರೂ.48 ಕೋಟಿ ಬೆಳೆ ವಿಮಾ ಪರಿಹಾರ ಮೊತ್ತವನ್ನು ರೈತರ ಖಾತೆಗೆ ಜಮಾ ಮಾಡಲಾಗಿದೆ ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ತಿಳಿಸಿದ್ದಾರೆ.
.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ರೈಲಿನ ವಿವರ: ರೈಲಿನ ಒಳಾಂಗಣವನ್ನು
ಕಲಾತ್ಮಕವಾಗಿ ನಿರ್ಮಿಸಲಾಗಿದೆ. 18 ಕೋಚ್ಗಳಲ್ಲಿ ಕರ್ನಾಟಕವನ್ನು ಆಳಿದ ಕದಂಬ, ಹೊಯ್ಸಳ, ವಿಜಯನಗರದ ಅರಸರು, ಚಾಲುಕ್ಯರ ಹೆಸರನ್ನು ಇಡಲಾಗಿದೆ. ಗೋಲ್ಡನ್ ಚಾರಿಯಟ್, ವಿಶ್ವದ ಪ್ರಸಿದ್ಧ ಪರಂಪರೆಯ ತಾಣಗಳ ಜೊತೆಗೆ ಪಶ್ಚಿಮ ಘಟ್ಟಗಳು, ಪ್ರಾಚೀನ ಕಡಲತೀರಗಳು, ಸಾಂಸ್ಕೃತಿಕ ತಾಣಗಳಿಗೆ ಪ್ರವಾಸಿಗರನ್ನು ಕರೆದೊಯ್ಯುತ್ತದೆ.
44 ಸುಸುಜ್ಜಿತ ಕ್ಯಾಬಿನ್ಗಳು, ಎನ್-ಸೂಟ್ ಸ್ನಾನಗೃಹ, ವೈಫೈ ವ್ಯವಸ್ಥೆಯನ್ನು ಒಳಗೊಂಡಿದೆ. ರುಚಿ ಮತ್ತು ನಳಪಾಕ ಹೆಸರಿನ ಎರಡು ಹೋಟೆಲ್ಗಳಲ್ಲಿ ಭಾರತೀಯ ಮತ್ತು ಅಂತರರಾಷ್ಟ್ರೀಯ ಪಾಕಪದ್ದತಿ ಇರಲಿದೆ. ಲಾಂಜ್ ಬಾರ್, ಫಿಟ್ನೆಸ್ ಸೆಂಟರ್ ಇತರೆ ಸೌಕರ್ಯ ಕಲ್ಪಿಸಲಾಗಿದೆ.
ಗೋಲ್ಡನ್ ಚಾರಿಯಟ್ ರೈಲು ಯಾತ್ರೆ ಪುನಾರಾರಂಭವಾಗಿದ್ದು, ಡಿಸೆಂಬರ್ 21 ರಿಂದ 26 ರವರೆಗೆ ಜುವೆಲ್ ಆಫ್ ಸೌತ್ ಪ್ರವಾಸವು ಬೆಂಗಳೂರಿನಿಂದ ಆರಂಭಗೊಂಡು ಮೈಸೂರು, ಕಾಂಚಿಪುರಂ, ಮಹಾಬಲಿಪುರಂ, ತಂಜಾವೂರು, ಚೆಟ್ಟಿನಾಡು, ಕೊಚ್ಚಿ ಮಾರ್ಗವಾಗಿ ಸಂಚಾರ ಮಾಡಲಿದೆ. ಈ ರೈಲಿಗೆ 44 ಸುಸುಜ್ಜಿತ ಕ್ಯಾಬಿನ್ಗಳು, ಎನ್ ಸೂಟ್ ಸ್ನಾನಗೃಹ, ವೈಫೈ ಸಹ ಒಳಗೊಂಡಿದೆ. ರುಚಿ ಮತ್ತು ನಳಪಾಕ ಹೆಸರಿನ ಎರಡು ಹೋಟೆಲ್ಗಳು, ಲಾಂಜ್ ಬಾರ್, ಫಿಟ್ನೆಸ್ ಸೆಂಟರ್ ಇತರೆ ಸೌಕರ್ಯ ಕಲ್ಪಿಸಲಾಗಿದೆ.
ಕರ್ನಾಟಕ ಮತ್ತು ದಕ್ಷಿಣ ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಇದು ಪ್ರತಿನಿಧಿಸಲಿದೆ. ಗೋಲ್ಡನ್ ಚಾರಿಯಟ್ ರೈಲು ಜಾಗತಿಕವಾಗಿ ಅತ್ಯುತ್ತಮ ಐಷಾರಾಮಿ ರೈಲು ಪ್ರಯಾಣಗಳಲ್ಲಿ ಒಂದಾಗಿದ್ದು ಅಂತಾರಾಷ್ಟ್ರೀಯ ಮೆಚ್ಚುಗೆಯನ್ನು ಗಳಿಸಲಿದೆ.
ಜೂವೆಲ್ ಆಫ್ ಸೌತ್ ಪ್ರವಾಸ ಡಿ.21 ರಿಂದ 26ರ ವರೆಗೆ ಇರಲಿದೆ. ಬೆಂಗಳೂರಿನಿಂದ ಆರಂಭಗೊಂಡು ಮೈಸೂರು ಕಾಂಚೀಪುರಂ ಮಹಾಬಲಿಪುರಂ ತಂಜಾವೂರು ಕೊಚ್ಚಿನ್ ಮರಾರಿಕುಲಂಗೆ ತೆರಳಿ ಬೆಂಗಳೂರಿಗೆ ಹಿಂದಿರುಗಲಿದೆ. (Golden chariot train price)ಒಬ್ಬರಿಗೆ ₹ 4.07 ಲಕ್ಷ ವೆಚ್ಚವಾಗಲಿದೆ. ಪ್ರೈಡ್ ಆಫ್ ಕರ್ನಾಟಕ ಪ್ರವಾಸವು ಜ.1ರಿಂದ 6ರವರೆಗೆ ಇರಲಿದೆ. ಬೆಂಗಳೂರಿನಿಂದ ನಂಜನಗೂಡು ಮೈಸೂರು ಹಳೆಬೀಡು ಚಿಕ್ಕಮಗಳೂರು ಹೊಸಪೇಟೆ ಗೋವಾಕ್ಕೆ ತೆರಳಿ ಬೆಂಗಳೂರಿಗೆ ವಾಪಸ್ಸಾಗಲಿದೆ. ಈ ಪ್ರವಾಸಕ್ಕೆ ಒಬ್ಬರಿಗೆ ₹2.81 ಲಕ್ಷ ವೆಚ್ಚ ಇರಲಿದೆ. ಸೋಜರ್ನ್ ಆಫ್ ಸೌತ್ ಚಾರ್ಟಡ್ ಪ್ರವಾಸವನ್ನು ಡಿ. 29ರಿಂದ ಜ.12ರವರೆಗೆ ಆಯೋಜಿಸಲಾಗಿದೆ ಎಂದು ಪ್ರವಾಸೋದ್ಯಮ ಅಧಿಕಾರಿಗಳು ತಿಳಿಸಿದ್ದಾರೆ.
ಸುಪ್ರಸಿದ್ಧ ಗೋಲ್ಡನ್ ಚಾರಿಯಟ್ ರೈಲು ಪ್ರವಾಸವು 'ಪ್ರೈಡ್ ಆಫ್ ಕರ್ನಾಟಕ' ಹೆಸರಿನಲ್ಲಿ ಫೆಬ್ರವರಿ 1 ರಿಂದ 6 ರವರೆಗೆ ಸಂಚರಿಸಲಿದೆ. ಬೆಂಗಳೂರಿನಿಂದ ಆರಂಭಗೊಂಡು ನಂಜನಗೂಡು, ಮೈಸೂರು, ಹಳೇಬೀಡು, ಚಿಕ್ಕಮಗಳೂರು, ಹೊಸಪೇಟೆ, ಗೋವಾ ಮಾರ್ಗವಾಗಿ ಸಂಚಾರಿಸಿ ಬೆಂಗಳೂರಿಗೆ ಹಿಂತಿರುಗಲಿದೆ. ಪ್ರವಾಸದ ಬಗ್ಗೆ ಹೆಚ್ಚಿನ ವಿವರಗಳಿಗೆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ.
ಗೋಲ್ಡನ್ ಚಾರಿಯಟ್ ರೈಲು(Golden chariot train route) ಯಾತ್ರೆ ಪುನಾರಾರಂಭಗೊಂಡಿದ್ದು, ಫೆಬ್ರವರಿ 29 ರಿಂದ 12 ರವರೆಗೆ ಗ್ಲಿಂಪ್ಸಸ್ ಆಫ್ ಕರ್ನಾಟಕ ಪ್ರವಾಸವು ಬೆಂಗಳೂರಿನಿಂದ ನಂಜನಗೂಡು, ಮೈಸೂರು, ಹೊಸಪೇಟೆ ಮಾರ್ಗವಾಗಿ ಸಂಚಾರ ಮಾಡಲಿದೆ. ಕರ್ನಾಟಕದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಇದು ಪ್ರತಿನಿಧಿಸಲಿದೆ. ಗೋಲ್ಡನ್ ಚಾರಿಯಟ್ ರೈಲು ಜಾಗತಿಕವಾಗಿ ಅತ್ಯುತ್ತಮ ಐಷಾರಾಮಿ ರೈಲು ಪ್ರಯಾಣಗಳಲ್ಲಿ ಒಂದಾಗಿದ್ದು ಅಂತಾರಾಷ್ಟ್ರೀಯ ಮೆಚ್ಚುಗೆಯನ್ನು ಗಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಲಿಂಕ್-https://www.goldenchariot.org/
Video link-https://x.com/karnatakavarthe/status/1870411541587296632?s=46&t=QZVD80BP2b61GD4oVgwLvA
]]>
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ(e-status) ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ(DBT status) ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ಸೂಚನೆ-ಜಿಲ್ಲೆ select ಮಾಡುವಾಗ ತಪ್ಪಾಗಿ ಬೇರೆ ಜಿಲ್ಲೆ select ಮಾಡಿದರೆ ಈ ಕೆಳಗಿನಂತೆ No data found ಎಂದು ತೋರಿಸುತ್ತದೆ. ಅದಕ್ಕಾಗಿ ಸರಿಯಾದ ಜಿಲ್ಲೆಯನ್ನು select ಮಾಡಿ)
ನಂತರ ನೇರ ನಗದು ವರ್ಗಾವಣೆ ಸ್ಥಿತಿ (Status of DBT) ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್(Ration card number) ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ (Annabhagya amount)ಮೊತ್ತವನ್ನು ತೋರಿಸುತ್ತದೆ
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ-Aadhaar not linked croploss farmers list - https://krushirushi.in/Aadhaar-not-linked-croploss-farmers-list-1636
'ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲಿ ಆಗಬೇಕಿತ್ತು. ಆದರೆ, 16.6 ಸೆಂ.ಮೀ (ಶೇ 61ರಷ್ಟು ಹೆಚ್ಚು) ಮಳೆ ಸುರಿದಿದೆ. ಅಂದಾಜು 56,993 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದೆ(Bele hani). ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ಇನ್ನು 3-4 ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, 15 ದಿನಗಳಲ್ಲಿ ಪರಿಹಾರ(Bele parihara) ವಿತರಿಸುತ್ತೇವೆ' ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಈ ಅವಧಿಯಲ್ಲಿ ಮಳೆಯಿಂದ ಸುಮಾರು 84 ಮನೆಗಳು ಸಂಪೂರ್ಣವಾಗಿ ಹಾನಿಗೆ ಒಳಗಾಗಿವೆ.ಇನ್ನು ರಾಜ್ಯದ ಹಲವು ಪ್ರದೇಶಗಳಲ್ಲಿ 2074 ಮನೆಗಳು ಭಾಗಶಹ ಹಾನಿ ಒಳಗಾಗಿವೆ. ಪೂರ್ತಿ ಮನೆ ಹಾನಿಗೆ 1.20 ಲಕ್ಷ ಪರಿಹಾರ ನೀಡಬೇಕು. ಜೊತೆಗೆ ಮನೆ ನಿರ್ಮಾಣ ಮಾಡಲು ಈಗಾಗಲೇ ಆದೇಶಿಸಲಾಗಿದೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಕುಡಿಯುವ ನೀರನ್ನು ಸಂಗ್ರಹಿಸಿ ಬೆಳೆಗೆ ನೀರು ಬಿಡಲು ಹೇಳಿದ್ದೇನೆ. ರಾಜ್ಯದ ಹಲವೆಡೆ ಅತಿವೃಷ್ಟಿಯಿಂದ 25 ಜನರು ಸಾವನ್ನಪ್ಪಿದ್ದಾರೆ. ಮಳೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.
ಮಳೆಯಿಂದ 9 ಸಾವಿರ ಹೆಕ್ಟರ್ ಕೃಷಿ ಜಮೀನು ಹಾಳಾಗಿದೆ. 50 ಸಾವಿರ ಹೆಕ್ಟರ್ ತೋಟಗಾರಿಕಾ ಪ್ರದೇಶ ಕೂಡ ಹಾನಿಯಾಗಿದೆ.ಈ ಬಗ್ಗೆ ಜಂಟಿ ಸರ್ವೆ ಮಾಡಿ ಒಂದು ವಾರದೊಳಗೆ ಸರ್ವೆ ವರದಿ ಸಲ್ಲಿಸುವಂತೆ ಸೂಚಿಸಿದ್ದೇನೆ ಎಂದು ಡಿಸಿ ಜಿಲ್ಲಾ ಪಂಚಾಯತ್ ಸಿಇಓ ಗಳ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ.
ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ(Vetarnary Department)ಕೋಳಿ ಮರಿಗಳನ್ನು ವಿತರಿಸಲಾಗುವುದು. ಜೇನು, ಕುರಿ(Sheep), ಹಸು(cow) ಸಾಕಾಣಿಕೆಗೆ ಪ್ರೋತ್ಸಾಹ ನೀಡುತ್ತಿರುವ ಮಾದರಿಯಲ್ಲಿ ನಾಟಿ ಕೋಳಿ ಸಾಕಾಣಿಕೆ(koli sakanike) ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬಡ ಕುಟುಂಬಗಳ ಮಹಿಳೆಯರಿಗೆ ತಲಾ 20 ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುವುದು. ಪ್ರತಿ ತಾಲೂಕಿಗೆ 106 ಫಲಾನುಭವಿಗಳಂತೆ ಗುರಿ ನಿಗದಿಪಡಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿನ ರೈತ ಮಹಿಳೆಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘದ ಮಹಿಳಾ ಸದಸ್ಯರಿಗೆ, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಯೋಜನೆಯಡಿ ಆದ್ಯತೆ ನೀಡಲಾಗುವುದು.
ನಾಟಿ ಕೋಳಿಗಳಿಗೆ ಪ್ರಸ್ತುತ ಬೇಡಿಕೆ ಹೆಚ್ಚಾಗಿದೆ. ಇವುಗಳ ಸಾಕಾಣೆಗೆ ಹೆಚ್ಚು ಖರ್ಚಾಗುವುದಿಲ್ಲ. ಮನೆ ಮುಂದೆ ಹಿತ್ತಲುಗಳಲ್ಲಿ ಕೋಳಿ ಸಾಕಬಹುದು, ವೆಚ್ಚಕ್ಕಿಂತ ಅಧಿಕ ಲಾಭ ಸಿಗುತ್ತದೆ. ಇವುಗಳ ಸಾಕಾಣಿಕೆಗೆ ಹೆಚ್ಚಿನ ಶ್ರಮ ಅಗತ್ಯವಿರುವುದಿಲ್ಲ. ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಆರ್ಥಿಕ ಸಬಲತೆ ಸಾಧಿಸಲು ತಲಾ 20 ಕೋಳಿ ಮರಿ ವಿತರಿಸಲಾಗುವುದು ಎಂದು ಹೇಳಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರ ಪಶು ಆಸ್ಪತ್ರೆ(ದನದ ಹಾಸ್ಪಿಟಲ್) ಅಥವಾ ಪಶು ಸಂಗೋಪನಾ ಇಲಾಖೆಯನ್ನು ಸಂಪರ್ಕಿಸಿ
]]>
ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.
ಅದೇ ರೀತಿ ಮಾವು ಬೆಳೆಗಾರರ ಖಾತೆಗೆ 2023ನೇ ಸಾಲಿನಲ್ಲಿ ಬರೋಬ್ಬರಿ 25 ಕೋಟಿ ರೂಪಾಯಿ ಮಾವು ವಿಮೆ ಪಾವತಿಯಾಗಿದೆ. ಜಿಲ್ಲೆಯ10,964 ರೈತರಿಗೆ ವಿಮೆಯು ಆಸರೆಯಾಗಿದೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ನಿಮಗೆ ಗೊತ್ತಿಲ್ಲದೇ ಹಾಗೆ ನಿಮ್ಮ ಪಹಣಿಯಲ್ಲಿ(RTC) ಅವರ ಹೆಸರು ಹಾಕಿದ್ದಾರೆ ಎಂಬುದನ್ನು ರೈತರು ಒಮ್ಮೆ ಪರಿಶೀಲಿಸಿ. ಈ ಕೆಲಸವನ್ನು ಪ್ರತಿಯೊಂದು ರೈತರು ಆದಷ್ಟು ಬೇಗ ಮಾಡಬೇಕು. ಈ ಮಾಹಿತಿ ನಿಮ್ಮ ಕಾನೂನು ಹೋರಾಟಕ್ಕೆ ನಿರ್ಣಾಯಕ ಹಾಗೂ ಸಾಕ್ಷ್ಯ ಸಂಗ್ರಹಿಸಲು ಅಗತ್ಯವಾದ ಪ್ರಕ್ರಿಯೆ ಆಗಿರುತ್ತದೆ. ಆದ್ದರಿಂದ ಇಂದೇ ನಿಮ್ಮ ಪಹಣಿಯ(Uthara) ಕಾಪಿ ಪಡೆದು ಪರಿಶೀಲನೆ ಮಾಡಿ, ಒಂದು ವೇಳೆ ಯಾರಾದರು ಎಂದು ನಮೂದಿಸಲಾಗಿದ್ದಲ್ಲಿ ಕೂಡಲೇ ಜಮೀನಿನ ದಾಖಲೆ(Land records) ಹಾಗೂ ಪಹಣಿಯೊಂದಿಗೆ ತಹಶಿಲ್ದಾರ್ ಅಥವಾ ಜಿಲ್ಲಾದಿಕಾರಿಗಳಿಗೆ ದೂರು ಸಲ್ಲಿಸಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://youtu.be/ZG-WJ9OlrTc?si=0Pb9RqHal3p3URQW
ನಿಮ್ಮ ಪಹಣೆಯಲ್ಲಿ(pahani) ಯಾರ ಹೆಸರಿದೆ ಎಂದು ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಲಿಂಕ್ ಮೋಲೆ ಕ್ಲಿಕ್ ಮಾಡಿ
https://landrecords.karnataka.gov.in/Service2/
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಪಹಣೆಯಲ್ಲಿ ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
Bele sala-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ-crop loan status - https://krushirushi.in/Bele-sala-crop-loan-status-1638
]]>
ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ(poultry), ಕುರಿ(Sheep), ಮೇಕೆ(goat), ಹಂದಿ ಸಾಕಾಣಿಕೆ ಮತ್ತು ರಸಮೇವು(Silage) ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.
National livestock mission
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ
(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)
ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ (Kisan credit card)ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.
ಅವಶ್ಯಕ ದಾಖಲಾತಿಗಳು :-
1)ಆಧಾರ,
2)ಪಹಣಿ ಪತ್ರ
3)ಬ್ಯಾಂಕ್ಖಾತೆ ಸಂಖ್ಯೆ,
ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು
4)ಭಾವ ಚಿತ್ರ.
ಕ್ರ.ಸಂ |
ಘಟಕ |
ಸೌಲಭ್ಯಗಳ ವಿವರ |
|
ಹೈನುಗಾರಿಕೆ |
|
1 |
ಮಿಶ್ರತಳಿ ದನಗಳ ನಿರ್ವಹಣೆ (1+1) |
ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ |
|
ಆ. ಸುಧಾರಿತ ಎಮ್ಮೆಗಳ ನಿರ್ವಹಣೆ |
ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ |
|
ಕುರಿ ಸಾಕಾಣಿಕೆ |
|
2 |
ಕುರಿಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ |
|
ಕುರಿಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (10) |
ರೂ. 13,000 ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (20) |
ರೂ. 26,000 ರಂತೆ ಸಾಲ ಸೌಲಭ್ಯ |
|
ಮೇಕೆ ಸಾಕಾಣಿಕೆ |
|
3 |
ಮೇಕೆಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ |
|
ಮೇಕೆಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ |
4 |
ಹಂದಿ ಸಾಕಾಣಿಕೆ (10) |
ರೂ,60,000 ರಂತೆ ಸಾಲ ಸೌಲಭ್ಯ |
|
ಕೋಳಿ ಸಾಕಾಣಿಕೆ |
|
5 |
ಮಾಂಸದ ಕೋಳಿ ಸಾಕಾಣಿಕೆ |
2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ |
|
ಮೊಟ್ಟೆ ಕೋಳಿ ಸಾಕಾಣಿಕೆ |
1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ |
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.
Vetarnary department subsidy schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಹಾಲು ಉತ್ಪಾದಕರಿಗೆ ಪ್ರೋತ್ಸಾಹ(Milk incentive)
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ಲಸಿಕಾ ಕಾರ್ಯಕ್ರಮ(Vaccination program)
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ(Back yard poultry)
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ, ಮನುಷ್ಯ ಹಾಗೂ ಜಾನುವಾರುಗಳ ಜೀವ ಹಾನಿ, ರಸ್ತೆ-ಸೇತುವೆ, ಇತರೆ ಮೂಲಭೂತ ಸೌಕರ್ಯಗಳಿಗೆ ಹಾನಿ ಉಂಟಾಗಿದ್ದು, ₹297 ಕೋಟಿ ಪರಿಹಾರವನ್ನು ವಿತರಿಸಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣಬೈರೆಗೌಡ ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.
ಕೇಂದ್ರ ಸರಕಾರದಿಂದ ಈ ವರ್ಷದ ಎನ್ಡಿಆರ್ಎಫ್ ಪರಿಹಾರ ಈವರೆಗೂ ಸಂದಾಯವಾಗಿಲ್ಲ,'' ಎಂದರು. ಪ್ರಸಕ್ತ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಬೆಳೆ ಹಾನಿ(crop loss) ಉದ್ದೇಶಕ್ಕೆ ಒಟ್ಟು 297 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಶೇ.75 ರಷ್ಟು ಮಂದಿಗೆ ಪರಿಹಾರ(Parihara) ತಲುಪಿದೆ. ಬಾಕಿ ಉಳಿದವರಿಗೆ 3-4 ದಿನಗಳಲ್ಲಿ ಜಮೆಯಾಗಲಿದೆ,'' ಎಂದರು.
ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/PariharaPayment/
ನಂತರ "ಆಧಾರ್ ಸಂಖ್ಯೆ/Aadhar number" ಮೇಲೆ ಕ್ಲಿಕ್ ಮಾಡಿ
ನಂತರ calamity type "Flood" ಎಂದು ಋುತು "2024-25" ಎಂದು select ಮಾಡಿ
ನಂತರ ನಿಮ್ಮ ಆಧಾರ್ ನಂಬರ್/Aadhar number ಹಾಕಿ,captch code ಹಾಕಿ,ವಿವರಗಳನ್ನು ಪಡೆಯಲು/Fetch details ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪರಿಹಾರ ಹಣ ಜಮಾ ಸ್ಟೇಟಸ್ ತಿಳಿಯಲಿದೆ
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಡಿಸೆಂಬರ್ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
]]>ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ, ಮನುಷ್ಯ ಹಾಗೂ ಜಾನುವಾರುಗಳ ಜೀವ ಹಾನಿ, ರಸ್ತೆ-ಸೇತುವೆ, ಇತರೆ ಮೂಲಭೂತ ಸೌಕರ್ಯಗಳಿಗೆ ಹಾನಿ ಉಂಟಾಗಿದ್ದು, ₹297 ಕೋಟಿ ಪರಿಹಾರವನ್ನು ವಿತರಿಸಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣಬೈರೆಗೌಡ ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.
ಕೇಂದ್ರ ಸರಕಾರದಿಂದ ಈ ವರ್ಷದ ಎನ್ಡಿಆರ್ಎಫ್ ಪರಿಹಾರ ಈವರೆಗೂ ಸಂದಾಯವಾಗಿಲ್ಲ,'' ಎಂದರು. ಪ್ರಸಕ್ತ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಬೆಳೆ ಹಾನಿ ಉದ್ದೇಶಕ್ಕೆ ಒಟ್ಟು 297 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಶೇ.75 ರಷ್ಟು ಮಂದಿಗೆ ಪರಿಹಾರ ತಲುಪಿದೆ. ಬಾಕಿ ಉಳಿದವರಿಗೆ 3-4 ದಿನಗಳಲ್ಲಿ ಜಮೆಯಾಗಲಿದೆ,'' ಎಂದರು.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ರಾಜ್ಯದ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಒತ್ತಾಯಿಸಿ ಡಿಸೆಂಬರ್ 16ರಂದು ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ.
ರಾಜ್ಯ ರೈತ ಸಂಘಗಳ ಏಕೀಕರಣ ಹೋರಾಟ ಸಮಿತಿ ಮುಖ್ಯಸ್ಥರಾದ ಪಚ್ಚೆ ನಂಜುಂಡಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ರೈತರ ಸಾಲ ಸಂಪೂರ್ಣ ಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಸರಿಯಾದ ಮಳೆ ಇಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿಸೆಂಬರ್ 16ರಂದು ಬೆಳಗ್ಗೆ 9 ಗಂಟೆಗೆ ಬೆಳಗಾವಿಯ ರೈತ ಸರ್ಕಲ್ ನಿಂದ ಸುವರ್ಣ ವಿಧಾನಸೌಧದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಹಾಗಾದರೆ ಕರ್ನಾಟಕದಲ್ಲಿ ಬೆಳೆಸಾಲ ಮನ್ನಾ ಸ್ಟೇಟಸ್ ಹೇಗಿದೆ?
ನೆರೆಯ ತೆಲಂಗಾಣದಲ್ಲಿ ₹2 ಲಕ್ಷದವರೆಗೆ
ರೈತರ ಸಾಲ ಮನ್ನಾ ಮಾಡಲು ಅಲ್ಲಿನ ಸರ್ಕಾರ ನಿರ್ಧಾರ
ಮಾಡಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರೈತರ ಸಾಲ ಮನ್ನಾ
ಮಾಡಿ ರೈತರನ್ನು ಋಣಮುಕ್ತರನ್ನಾಗಿಸಿ' ಎಂದು ವಿಧಾನಸಭೆ
ವಿರೋಧಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದ್ದಾರೆ
Belesala manna status 2024-ಬೆಳೆಸಾಲ ಮನ್ನಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ
ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ/farmer" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
]]>
ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ-Gruhalakshmi 15th instalment
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಡಿಸೆಂಬರ್ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ, ಮನುಷ್ಯ ಹಾಗೂ ಜಾನುವಾರುಗಳ ಜೀವ ಹಾನಿ, ರಸ್ತೆ-ಸೇತುವೆ, ಇತರೆ ಮೂಲಭೂತ ಸೌಕರ್ಯಗಳಿಗೆ ಹಾನಿ ಉಂಟಾಗಿದ್ದು, ₹297 ಕೋಟಿ ಪರಿಹಾರವನ್ನು ವಿತರಿಸಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣಬೈರೆಗೌಡ ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ನಿಯಮಿತದ ವತಿಯಿಂದ 2024-25 ನೇ ಸಾಲಿನ ಗಿರಿಜನ ಉಪ ಯೋಜನೆಯಡಿಯಲ್ಲಿ ಕುರಿ/ಮೇಕೆ ಘಟಕ ಪೂರೈಕೆ ಯೋಜನೆಗೆ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಪಂಗಡದ ಸದಸ್ಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
16 ರಿಂದ 60 ವರ್ಷದೊಳಗಿನ ಮಹಿಳಾ/ಪುರುಷ ಸದಸ್ಯರು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿ.20 ಕಡೆಯ ದಿನವಾಗಿದೆ. ಈ ಯೋಜನೆಯಡಿ 10 ಸುಧಾರಿತ ಹೆಣ್ಣು ಕುರಿ/ಮೇಕೆ, ಟಗರು/ಹೋತ ಒಟ್ಟು ಘಟಕ ದರ ರೂ.66,000/ಗಳಿದ್ದು, ಶೇ.90 ರಷ್ಟು ಸಹಾಯಧನ ಹೊಂದಿರುತ್ತದೆ.
ಹೆಚ್ಚಿನ ವಿವರಗಳಿಗೆ ಹತ್ತಿರದಲ್ಲಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ಅಥವಾ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿತು ಮತ್ತು ಅಭಿವೃದ್ದಿ ನಿಗಮ, ನಿಯಮಿತ ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕುರಿತು ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Koli sakanike-ಉಚಿತ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ
ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ.
ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕೋಳಿ ಮರಿಗಳನ್ನು ವಿತರಿಸಲಾಗುವುದು. ಜೇನು, ಕುರಿ, ಹಸು ಸಾಕಾಣಿಕೆಗೆ ಪ್ರೋತ್ಸಾಹ ನೀಡುತ್ತಿರುವ ಮಾದರಿಯಲ್ಲಿ ನಾಟಿ ಕೋಳಿ ಸಾಕಾಣಿಕೆ ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬಡ ಕುಟುಂಬಗಳ ಮಹಿಳೆಯರಿಗೆ ತಲಾ 20 ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುವುದು. ಪ್ರತಿ ತಾಲೂಕಿಗೆ 106 ಫಲಾನುಭವಿಗಳಂತೆ ಗುರಿ ನಿಗದಿಪಡಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿನ ರೈತ ಮಹಿಳೆಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘದ ಮಹಿಳಾ ಸದಸ್ಯರಿಗೆ, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಯೋಜನೆಯಡಿ ಆದ್ಯತೆ ನೀಡಲಾಗುವುದು.
ನಾಟಿ ಕೋಳಿಗಳಿಗೆ ಪ್ರಸ್ತುತ ಬೇಡಿಕೆ ಹೆಚ್ಚಾಗಿದೆ. ಇವುಗಳ ಸಾಕಾಣೆಗೆ ಹೆಚ್ಚು ಖರ್ಚಾಗುವುದಿಲ್ಲ. ಮನೆ ಮುಂದೆ ಹಿತ್ತಲುಗಳಲ್ಲಿ ಕೋಳಿ ಸಾಕಬಹುದು, ವೆಚ್ಚಕ್ಕಿಂತ ಅಧಿಕ ಲಾಭ ಸಿಗುತ್ತದೆ. ಇವುಗಳ ಸಾಕಾಣಿಕೆಗೆ ಹೆಚ್ಚಿನ ಶ್ರಮ ಅಗತ್ಯವಿರುವುದಿಲ್ಲ. ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಆರ್ಥಿಕ ಸಬಲತೆ ಸಾಧಿಸಲು ತಲಾ 20 ಕೋಳಿ ಮರಿ ವಿತರಿಸಲಾಗುವುದು ಎಂದು ಹೇಳಲಾಗಿದೆ.
1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ(Vetarnary department)ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.
ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
Vetarnary department schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ
ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy - https://krushirushi.in/Cattle-shed-subsidy-scheme-1630
ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>ಹಾವೇರಿ ಜಿಲ್ಲೆಯ 15 ಸಾವಿರ ರೈತರಿಗೆ 7.5 ಕೋಟಿ ಬೆಳೆ ಪರಿಹಾರ ಬಿಡುಗಡೆ, ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಬೆಳೆ ಪರಿಹಾರ ಜಮಾ ಪ್ರಾರಂಭವಾಗಿದ್ದು, ನಿಮ್ಮ ಜಮಾ ಸ್ಟೇಟಸ್ ಈ ಕೆಳಗಿನಂತೆ ಚೆಕ್ ಮಾಡಿಕೊಳ್ಳಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ರೈತರಿಗೆ ವರವಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ(Pradhan mantri Kisan samman Nidhi Yojana), ಉತ್ತಮ ಪರಿಕರಗಳು, ಬೆಳೆಗಳ ಆರೋಗ್ಯ ನಿರ್ವಹಣೆ ಮತ್ತು ಹೆಚ್ಚಿನ ಇಳುವರಿ ಸಾಧಿಸಲು ಅವಕಾಶ ಕಲ್ಪಿಸಿದೆ. ಈ ಯೋಜನೆಯಡಿ ಅರ್ಹ ರೈತ ಕುಟುಂಬಗಳಿಗೆ ವಾರ್ಷಿಕ ₹6,000 ಆರ್ಥಿಕ ನೆರವನ್ನು ಒದಗಿಸಲಾಗುತ್ತದೆ, ಇದನ್ನು ₹2,000 ಪ್ರತಿ ನಾಲ್ಕು ತಿಂಗಳಿಗೊಮ್ಮೆ ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ. 2023-24ನೇ ಸಾಲಿನಲ್ಲಿ ಈ ಯೋಜನೆಯಡಿ ₹4781.68 ಕೋಟಿ ನಗದು ರೈತರ ಖಾತೆಗಳಿಗೆ ನೇರವಾಗಿ(DBT) ವರ್ಗಾಯಿಸಲಾಗಿದೆ.
ಇಲ್ಲಿಯವರೆಗೂ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಹೀಗೆ ಚೆಕ್ ಮಾಡಿ-Pmkisan beneficiary status
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಮೊದಲು know your status ಮೇಲೆ ಕ್ಲಿಕ್ ಮಾಡಿ
ನಂತರ know your register number ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ
ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ ಕಂತುಗಳ ಮಾಹಿತಿ ದೊರೆಯಲಿದೆ.
ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ
ನಂತರ update your details ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ
Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.
ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ
Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.
FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ ಕಾರಣ ಮತ್ತು ಪರಿಹಾರ
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
fruitspmk.gov.in ಪೋರ್ಟಲ್ ನಲ್ಲಿ |
|||
1 |
ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ |
ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು |
ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ (NIC) ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ. ಆ) ಸಮಸ್ಯಾತ್ಮಕ ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ. |
2 |
ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು |
ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ |
ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ |
3 |
ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು |
ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ |
ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ |
4 |
ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ |
ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ |
OPERATOR ಲಾಗಿನ್ (RSK, ADA office, JDA office) OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು |
5 |
01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ |
ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ |
ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ) |
6 |
Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು |
ಜಿಲ್ಲೆಗಳಲ್ಲಿ OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ |
AAO ಲಾಗಿನ್ (RSK, ADA office, JDA office) AAO ಲಾಗಿನ್ನಲ್ಲಿ ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ, ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
7 |
ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ |
ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ) |
AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ. |
8 |
PFMS rejected |
Aadhaar Number is not seeded in NPCI |
ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ |
Bank Name And IFSC Code are not related to each other |
ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ |
||
Bank Name is not as per PFMS Bank Master. |
|||
Beneficiary is rejected as Account Type is other than SB / SBA / JD |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ) |
||
Duplicate Beneficiary Name , Bank Account No and Bank Name not allowed for same scheme |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
IFSC Code either not present or currently inactive in tbl BankBranch |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
Incorrect Aadhaar Number |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
One or more mandatory tags values are missing. |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
||
Rejected by Bank, Account No does not exist in Bank/INVALID/CLOSED |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
9 |
Amount credited to Account Number-NA |
Aadhaar number based payment by GoI |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ. |
10 |
PAYMENT STOPPED BY STATE |
XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ |
ಕೇಂದ್ರ ಸರ್ಕಾರ |
11 |
Transaction failed |
ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ. |
12 |
ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ |
OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ |
ಕೇಂದ್ರ ಸರ್ಕಾರ |
13 |
ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು |
ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ. |
ಕೇಂದ್ರ ಸರ್ಕಾರ ದ pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ. |
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ವರ್ಷದಲ್ಲಿ ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯ (ಪಿಎಂ-ಕಿಸಾನ್) ಫಲಾನುಭವಿಗಳ ಸಂಖ್ಯೆ(pmkisan 19th instalment ineligible list) ಐದು ಲಕ್ಷದಿಂದ ಆರು ಲಕ್ಷದಷ್ಟು ಕುಸಿತವಾಗಿದೆ.
ಲೋಕಸಭೆಯಲ್ಲಿ ಮೈಸೂರು ಸಂಸದ ಯದುವೀರ್ ಒಡೆಯರ್ ಮಂಗಳವಾರ ಕೇಳಿದ ಪ್ರಶ್ನೆಗೆ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್ ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ.
13ನೇ ಕಂತಿನವರೆಗೆ (2023ರ ಮಾರ್ಚ್) ರಾಜ್ಯದ ಫಲಾನುಭವಿಗಳ ಸಂಖ್ಯೆ 49 ಲಕ್ಷದಷ್ಟು ಇತ್ತು. 14ನೇ ಕಂತಿನಲ್ಲೂ ಫಲಾನುಭವಿಗಳ ಸಂಖ್ಯೆ 49.34 ಲಕ್ಷ ಆಗಿತ್ತು. 15ನೇ ಕಂತಿನಲ್ಲಿ ಈ ಸಂಖ್ಯೆ 43.78 ಲಕ್ಷಕ್ಕೆ ಕುಸಿಯಿತು. ಆ ಬಳಿಕ ಸಂಖ್ಯೆಯಲ್ಲಿ ಗಣನೀಯ ಏರಿಕೆ ಆಗಿಲ್ಲ.
ಪಿಎಂ- ಕಿಸಾನ್ ಯೋಜನೆಯಡಿ ಕೃಷಿಕರಿಗೆ ವಾರ್ಷಿಕ ₹6 ಸಾವಿರ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಈ ಮೊತ್ತವನ್ನು ₹8 ಸಾವಿರ ಅಥವಾ ₹12 ಸಾವಿರಕ್ಕೆ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
Pmkisan 19th instalment ineligible list-ಪಿಎಂ ಕಿಸಾನ್ 19ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ಪಿಎಂ ಕಿಸಾನ್ ಸಮ್ಮಾನ ನಿಧಿ 12,000 ಕ್ಕೆ ಏರಿಕೆಗೆ ಪ್ರಸ್ತಾವನೆ, ಯಾರಿಗೆಲ್ಲಾ ಸಿಗಲಿದೆ 19ನೇ ಕಂತು ಹೀಗೆ ಚೆಕ್ ಮಾಡಿ-Pmkisan 19th instalment - https://krushirushi.in/Pmkisan-19th-instalment-1731
]]>ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಡಿಸೆಂಬರ್ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಪಿಎಂ ಕಿಸಾನ್ ಸಮ್ಮಾನ ನಿಧಿ 12,000 ಕ್ಕೆ ಏರಿಕೆ?
2025-26ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ಇತ್ತೀಚೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ರೈತರು, ರೈತ ಸಂಘಟನೆಗಳ ಪ್ರಮುಖರು ಹಲವು ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದರು.
ದೀರ್ಘಾವಧಿ ಸಾಲಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸುವುದು, ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಆರ್ಥಿಕ ನೆರವನ್ನು 12,000 ರೂ.ಗಳಿಗೆ ಏರಿಕೆ ಮಾಡುವುದು, ಕನಿಷ್ಠ ಬೆಂಬಲ ಬೆಲೆ ಯೋಜನೆ ಮುಂತಾದವುಗಳ ಕುರಿತು ಸರ್ಕಾರದ ಗಮನವನ್ನು ಸೆಳೆಯಲಾಯಿತು.
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
(2024-25) ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ(Pradn mantri krishi sincahyi yojana)ಹನಿ ನೀರಾವರಿ(Drip irrigation) ಕಾರ್ಯಕ್ರಮದಡಿ ಪ.ಜಾತಿ/ ಪ.ಪಂಗಡ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನದ ಇತರೆ ವರ್ಗದ ರೈತರಿಗೆ ಶೇ.55 ಸಹಾಯಧನ ಸೌಲಭ್ಯವಿದೆ.
ತೋಟಗಾರಿಕೆಯಲ್ಲಿ ಯಾಂತ್ರೀಕರಣರಡಿ(Horticulture department) ಕಳೆ ಕೊಚ್ಚುವ ಯಂತ್ರ, ಮರ ಕತ್ತರಿಸುವ ಯಂತ್ರ, ತಳ್ಳುವ ಗಾಡಿ, ಅಲ್ಯೂಮಿನಿಯಂ ಏಣಿ(Aluminium ladder), ಅಡಿಕೆ ದೋಟಿ(Fiber Doti), ಪವರ್ ವೀಡರ್(Power Weeder), ಕಾಳುಮೆಣಸು ಬಿಡಿಸುವ ಯಂತ್ರ(Blackpepper machine), ಅಡಿಕೆ ಬಿಡಿಸುವ ಯಂತ್ರಗಳಿಗೆ(Arecanut machine) ಪ.ಜಾತಿ/ ಪ.ಪಂಗಡ ವರ್ಗ, ಮಹಿಳೆಯರಿಗೆ ರೈತರಿಗೆ ಶೇ.50 ರಷ್ಟು ಸಹಾಯಧನ ಮತ್ತು ಇತರೆ ವರ್ಗದ ರೈತರಿಗೆ ಶೇ.40 ರಷ್ಟು ಸಹಾಯಧನ ನೀಡಲಾಗುವುದು.
ರಾಷ್ಟ್ರೀಯ ಎಣ್ಣೆಕಾಳು ಮತ್ತು ಎಣ್ಣೆ ತಾಳೆ ಅಬಿಯಾನ ಯೋಜನೆ ತಾಳೆ ಬೆಳೆ ಪ್ರದೇಶ ವಿಸ್ತರಣೆಗೆ ಸಹಾಯಧನ ನೀಡಲಾಗುವುದು. ಬಳಗುಂದ ಮತ್ತು ಕೂಡಿಗೆ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಗಿಡಗಳು ಲಭ್ಯವಿರುತ್ತದೆ (ಪ್ರತಿ ಗಿಡಕ್ಕೆ ರೂ.25/-). ಹೆಚ್ಚಿನ ವಿವರಗಳಿಗೆ ಆಯಾಯ ಹೋಬಳಿಯ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಪಿಎಂಎಫ್ಎಮ್ ಇ ಯೋಜನೆಯಡಿ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಅರ್ಜಿ ಆಹ್ವಾನ-pmfme subsidy scheme
DETAILS OF DISTRICT RESOURCE PERSON |
||||||
SL NO |
DISTRICT |
No Of DRPs |
NAME & ADDRESS |
MOBILE NO |
E-MAIL ID |
|
1 |
Bagalkote |
3 |
Vijayakshmi |
8618099490 |
||
|
|
Suryakant G Mohare |
9449712250 |
|||
|
|
Praveen Pujari |
9741403143 |
|||
2 |
Bengaluru Urban/Rural |
8 |
Abhishek |
7411918648 |
||
|
|
Gowtham |
9448752379 |
|||
|
|
Pavithra |
7483011419 |
|||
3 |
|
|
Thirumalesh |
9739868651 |
||
|
|
T M SACHITHANANDAM |
9952913999 |
|||
|
|
Shivakumar B L |
9449671735 |
|||
|
|
Umesh Neelgund |
9900061389 |
|||
|
Bellary |
6 |
Kotihal Hiremath Nagabasaiah |
9108460621 |
||
|
|
|
P. Shalem Raj |
8880085079 |
||
|
|
|
Harshitha |
7349092680, |
||
4 |
7337600124 |
|||||
|
|
Arun U |
8105435523 / |
|||
|
9353563489 |
|||||
|
|
|
Chethana Prakash Hoskeri |
9591462316 / |
||
|
7349092680 |
|||||
|
|
|
Mallikarjun |
9008184698 |
||
5 |
Belagavi |
16 |
ri Mahadevappa M Nyamagoudar |
9449011295 |
||
|
|
Sri Sunil mole |
9743437030 |
|||
|
|
|
Chaya Gopal yadawad |
8660857653 |
||
|
|
|
Mahesh Mathad |
9844038670 |
||
|
|
|
Poornima. Odarale |
7338047277 |
||
|
|
|
RENUKA PATIL |
8971320893 |
||
|
|
|
Sameer Peerasaheb Lokapur |
9481984120 |
||
|
|
|
Shweta Kotagi |
9742143544 |
||
|
|
|
Shweta Tattimani |
8722828381 |
||
|
|
|
Umesh Yaragatti |
9483738562 |
||
|
|
|
Vinod |
9731418069 |
|
|
|
Chandrakanth V Maradi |
9739940675 |
|
|
|
|
Govindaraddi Jayannavar |
7760459396 |
|
|
|
|
Laxmi kadammanavar |
7259446267 |
|
|
|
|
Praveen Kottalagi |
8073186007 |
|
|
|
|
Supriya p kottalagi |
9108095142 |
|
6 |
Bidar |
2 |
Premdas |
7204607091 |
|
|
|
|
Nitesh Molkeri |
7760960670 |
|
7 |
Chamarajanagar |
3 |
SRINATH RAO, |
9845793411 |
|
|
|
|
Mahesh |
636317011 |
|
|
|
|
Manoj.N |
9916849652 |
|
8 |
Chikkamagalur |
2 |
Roshan |
9110646735 |
|
|
|
|
Sri. S.B. Ramachandrappa |
9164924609 |
|
9 |
Chikkaballapura |
2 |
Naveen Kumar D R , |
9449940832 |
|
|
|
|
C R Nagaraj |
9481487797 |
|
10 |
Chitradurga |
3 |
Rajanna |
9980380195 |
|
|
|
|
Amrutha |
9880075603 |
|
|
|
|
Mohan |
9035933941 |
|
11 |
Dakshina Kannada |
5 |
Shri Sankappa Shetty Adyar |
9686695679 |
|
|
|
|
N Satish Maben |
8660293638 |
|
|
|
|
Akash Natekar |
7259577967 |
|
|
|
|
Ahmed Abdul Fazal |
9448549130 |
|
|
|
|
Anusha M |
7736276374 |
|
12 |
Davanagere |
3 |
Basavaraja K.D |
8105081703 |
|
|
|
|
Chandrasekhara S K |
8925996600 |
|
|
|
|
VANITHA CHANDRASHEKAR |
7022212340 |
|
13 |
Dharwad |
7 |
K.F.UDHOJI |
9035774929 |
|
|
|
|
Priya Kivadasannavar |
9060202709 |
|
|
|
|
Goura Suragimath |
7676234667 |
|
|
|
|
Somashekhar pujar |
9110475286 |
|
|
|
|
Vittal B Suryavanshi |
9880640615 |
|
|
|
|
Banderao Patwari |
879417276199 |
|
|
|
|
Shri. Gopalkrishna.Nayak |
9448358676 |
|
14 |
Gadag |
2 |
Srinivas rathod |
9686641134 |
|
|
|
|
Rudrappa Elalli |
9480100264 |
|
|
|
|
S.V.Galgi |
9663579897 |
15 |
Hassan |
3 |
Pradeep |
|
|
|
|
|
Manjula S C |
|
|
|
|
|
Shravan Kumar P V |
|
|
16 |
Haveri |
4 |
Hiremat soumya |
9538015696 |
|
|
|
|
Sandhya s |
|
|
|
|
|
Veeresh |
|
|
|
|
|
Sangeetha |
|
|
17 |
Kodagu |
2 |
Puttaswamy |
|
|
|
|
|
Neeraj |
|
|
18 |
Kolar |
2 |
Somshekhar KR |
|
|
|
|
|
Vidyashree |
|
|
19 |
Kalaburgi |
3 |
|||
|
|
|
Sharankumar Tallalli |
|
|
|
|
|
Santoshkumar Javali |
|
|
|
|
|
Sharanagouda |
|
|
20 |
Koppal |
2 |
M.Shivalingamurthy |
|
|
|
|
|
Vamanamurthy |
|
|
21 |
Mandya |
4 |
Mahesh Chandra Guru |
|
|
|
|
|
Gavaskar A S |
|
|
|
|
|
Kiran S |
|
|
|
|
|
Ashwin Kuamr |
|
|
22 |
Mysore |
4 |
Dr.Vibhakar |
|
|
|
|
|
Ramesh |
|
|
|
|
|
Veena Bhat |
|
|
|
|
|
Sri Jagadeesh Kganchinamath, |
|
|
23 |
Ramanagara |
5 |
Abhishek |
|
|
|
|
Shivashankar. B |
|
||
|
|
|
Ranjith kumar s |
|
|
|
|
|
Prakash C |
9611161385 |
|
|
|
|
Sujay R K |
9845968372 |
24 |
Raichur |
2 |
Asadulla |
9845157589 |
|
|
|
|
Prakash G |
9986740765 |
|
25 |
Shivamogga |
6 |
Laxminarayana, TJ |
9448786634 |
|
|
|
|
Jayaram Bhat |
9448218871 |
|
|
|
|
Swetha |
8861413537 |
|
|
|
|
Itigi.Shivaputhrappa |
9343312000 |
|
|
|
|
Yashwant Patel M P |
7676895692 |
|
|
|
|
Vanishree Sagar |
8431304790 |
|
26 |
Tumkuru |
3 |
Gowtham, |
9448752379 |
|
|
|
|
Praneeth.G.S., |
9902856987 |
|
|
|
|
Jyothi P M |
9740209538 |
|
27 |
Udupi |
2 |
Suraj Shetty |
9019075051 |
|
|
|
|
Niteesh |
9591143173 |
|
28 |
Uttara Kannada |
1 |
Sujay Bhat, |
9482287323 |
|
29 |
Vijayapura |
3 |
Mahadev S.Ambali |
9880247148 |
|
|
|
|
Smt. Shailaja Basavaraj Sthavarmath |
9972435327 |
|
|
|
|
Siddappa Pujari |
7019268550 |
|
30 |
Vijayanagara |
1 |
Lakshman Shetty M |
8970880012 |
|
31 |
Yadagiri |
3 |
Md. Hassan Mulla |
9742907573 |
|
|
|
|
Balraj |
9632328213 |
|
|
|
|
Santhosh Javalli |
9241333555 |
|
|
Total |
115 |
|
ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ.
ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕೋಳಿ ಮರಿಗಳನ್ನು ವಿತರಿಸಲಾಗುವುದು. ಜೇನು, ಕುರಿ, ಹಸು ಸಾಕಾಣಿಕೆಗೆ ಪ್ರೋತ್ಸಾಹ ನೀಡುತ್ತಿರುವ ಮಾದರಿಯಲ್ಲಿ ನಾಟಿ ಕೋಳಿ ಸಾಕಾಣಿಕೆ ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬಡ ಕುಟುಂಬಗಳ ಮಹಿಳೆಯರಿಗೆ ತಲಾ 20 ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುವುದು. ಪ್ರತಿ ತಾಲೂಕಿಗೆ 106 ಫಲಾನುಭವಿಗಳಂತೆ ಗುರಿ ನಿಗದಿಪಡಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿನ ರೈತ ಮಹಿಳೆಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘದ ಮಹಿಳಾ ಸದಸ್ಯರಿಗೆ, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಯೋಜನೆಯಡಿ ಆದ್ಯತೆ ನೀಡಲಾಗುವುದು.
ನಾಟಿ ಕೋಳಿಗಳಿಗೆ ಪ್ರಸ್ತುತ ಬೇಡಿಕೆ ಹೆಚ್ಚಾಗಿದೆ. ಇವುಗಳ ಸಾಕಾಣೆಗೆ ಹೆಚ್ಚು ಖರ್ಚಾಗುವುದಿಲ್ಲ. ಮನೆ ಮುಂದೆ ಹಿತ್ತಲುಗಳಲ್ಲಿ ಕೋಳಿ ಸಾಕಬಹುದು, ವೆಚ್ಚಕ್ಕಿಂತ ಅಧಿಕ ಲಾಭ ಸಿಗುತ್ತದೆ. ಇವುಗಳ ಸಾಕಾಣಿಕೆಗೆ ಹೆಚ್ಚಿನ ಶ್ರಮ ಅಗತ್ಯವಿರುವುದಿಲ್ಲ. ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಆರ್ಥಿಕ ಸಬಲತೆ ಸಾಧಿಸಲು ತಲಾ 20 ಕೋಳಿ ಮರಿ ವಿತರಿಸಲಾಗುವುದು ಎಂದು ಹೇಳಲಾಗಿದೆ.
1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ(Vetarnary department)ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.
ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
Vetarnary department schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ
ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy - https://krushirushi.in/Cattle-shed-subsidy-scheme-1630
ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>ರಾಜ್ಯ ಸರ್ಕಾರವು ಸಾಮಾನ್ಯ ಜನರ ಮತ್ತು ಕೂಲಿ ಕಾರ್ಮಿಕರ ಏಳಿಗೆಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು (MGNAREGA)ಜಾರಿಗೆ ತಂದಿದ್ದಾರೆ.
ಮಹಾತ್ಮ ಗಾಂಧಿ ನರೇಗಾ ಯೋಜನೆ(NAREGA) ಅಡಿ ವೈಯಕ್ತಿಕ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಯ ಈ ಕೆಳಕಂಡ ವರ್ಗಗಳಲ್ಲಿ ಯಾವುದಾದರೂ ಒಂದು ವರ್ಗದಲ್ಲಿ ಅರ್ಹರಾಗಿರತಕ್ಕದ್ದು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ
ಅಲೆಮಾರಿ ಬುಡಕಟ್ಟುಗಳು
ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು
ಮಹಿಳಾ ಪ್ರಧಾನ ಕುಟುಂಬಗಳು
ವಿಕಲಚೇತನ ಕುಟುಂಬಗಳು
ಭೂ ಸುಧಾರಣಾ ಫಲಾನುಭವಿಗಳು
ವಸತಿ ಯೋಜನೆಗಳ ಫಲಾನುಭವಿಗಳು
ಅರಣ್ಯ ಹಕ್ಕು ಕಾಯಿದೆ 2006ರ ಫಲಾನುಭವಿಗಳು
ಸಣ್ಣ ಮತ್ತು ಅತಿ ಸಣ್ಣ ರೈತರು
ಫಲಾನುಭವಿಯು ವೈಯಕ್ತಿಕ ಸೌಲಭ್ಯ ಪಡೆಯಲು
ಫಲಾನುಭವಿಯು ಕಡ್ಡಾಯವಾಗಿ ನರೇಗಾ ಯೋಜನೆಯ ಜಾಬ್ ಕಾರ್ಡ್(Job card) ಹೊಂದಿರಬೇಕು
ಫಲಾನುಭವಿಗೆ ನೀಡಲಾದ ವೈಯಕ್ತಿಕ ಕಾಮಗಾರಿಯಲ್ಲಿ ಆತನ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಾದರು ಕೆಲಸ ನಿರ್ವಹಿಸಬೇಕು
ನರೇಗಾ ಯೋಜನೆಯಡಿ ಫಲಾನುಭವಿಕೆ ನೀಡಬಹುದಾದ ವಯಕ್ತಿಕ ಕಾಮಗಾರಿಗಳ ಗರಿಷ್ಠ ಮಟ್ಟದ ಮಿತಿಯನ್ನು 2 ಲಕ್ಷಗಳಿಗೆ ನಿಗದಿಪಡಿಸಿ ಸದರಿ ಗರಿಷ್ಠ ಮೊತ್ತದ ಮಿತಿಯನ್ನು ಹೆಚ್ಚಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗಿರುತ್ತದೆ
ಯೋಜನೆ ಅಡಿ ನೊಂದಾಯಿತವಾದ ಒಂದು ವರ್ಷ ಕುಟುಂಬವು ತನ್ನ ಜೀವಿತಾವಧಿಯಲ್ಲಿ ಗರಿಷ್ಠ ಎರಡು ವರೆ ಲಕ್ಷದ ಗಳವರೆಗೆ ಯೋಜನೆ ಅಡಿ ನೀಡಲಾಗುವ ವೈಯಕ್ತಿಕ ಕಾಮಗಾರಿಗಳನ್ನು ಪಡೆದುಕೊಳ್ಳಬಹುದಾಗಿದೆ
ನರೇಗಾ ಯೋಜನೆಯಡಿ ಕೃಷಿಹೊಂಡ ನಿರ್ಮಾಣ
ನರೇಗಾ ಯೋಜನೆ ಅಡಿ ಅರ್ಹ ಫಲಾನುಭವಿಯು ಯೋಜನೆ ಅಡಿ ನಿರ್ಮಿಸಿಕೊಂಡ ಕೃಷಿಹೊಂಡ ಕಾಮಗಾರಿಯನ್ನು ಮುಂದಿನ ಐದು ವರ್ಷಗಳವರೆಗೆ ಮುಚ್ಚತಕ್ಕದ್ದಲ್ಲ.
ಒಂದು ವೇಳೆ ಫಲಾನುಭವಿಯು ಕೃಷಿ ಹೊಂಡವನ್ನು ಮುಚ್ಚಿದ್ದಲ್ಲಿ ಕೃಷಿಹೊಂಡ ನಿರ್ಮಾಣಕ್ಕಾಗಿ ತಗಲಿದ ವೆಚ್ಚ ಹಾಗೂ ಶೇಕಡ 18ರಷ್ಟು ಬಡ್ಡಿ ಸೇರಿ ಸರ್ಕಾರಕ್ಕೆ ಬರಣ ಮಾಡತಕ್ಕದ್ದು
ಕೃಷಿ ಹೊಂಡ ನಿರ್ಮಾಣ ಕಾಮಗಾರಿಯನ್ನು ಅನುಷ್ಠಾನಗೊಳಿಸುವ ಮುಂಚೆ ಫಲಾನುಭವಿಗಳಿಂದ ಮುಚ್ಚಳಿಕೆ ಪತ್ರವನ್ನು ಕಡ್ಡಾಯವಾಗಿ ಪಡೆಯತಕ್ಕದ್ದು
ಕೃಷಿ ಹೊಂಡ ಕಾಮಗಾರಿಗಳ ಕ್ರಿಯಾಯೋಜನೆಯನ್ನು ಅನುಮೋದನೆಗಾಗಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸುವಾಗ ಮುತ್ತಳಿಕೆ ಪತ್ರದ ಪ್ರತಿಯನ್ನು ಲಗತ್ತಿಸುವುದು
ಕಾಮಗಾರಿಗಳ ಆಯ್ಕೆ ಮಾಡುವಾಗ ತಾಂತ್ರಿಕವಾಗಿ ಸೈಟ್ ಫೀಸಿಬಿಲಿಟಿ ಇರುವುದನ್ನ ಖಚಿತಪಡಿಸಿಕೊಳ್ಳುವುದು
ಕೃಷಿಹೊಂಡ ಕಾಮಗಾರಿಯ ಅನುಮೋದನೆಯಾದ ಆರ್ಥಿಕ ವರ್ಷದಲ್ಲಿಯೇ ಕಡ್ಡಾಯವಾಗಿ ಪೂರ್ಣಗೊಳಿಸುವುದು
ಅನುಷ್ಠಾನಗೊಳಿಸುವಾಗ ಮೂರು ಹಂತದ Geo Tag ಮಾಡುವ ಪ್ರಕ್ರಿಯೆಯನ್ನು ನಿಗದಿ ಅವಧಿಯೊಳಗೆ ಪೂರ್ಣಗೊಳಿಸುವುದು ಕಡ್ಡಾಯವಾಗಿರುತ್ತದೆ
ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಸಿಟಿಜನ್ ಇನ್ಫಾರ್ಮಶನ್ ಬೋರ್ಡ್ ಅಳವಡಿಸತಕ್ಕದ್ದು.
ದನದ ಶೆಡ್ ನಿರ್ಮಾಣಕ್ಕೆ 57,000 ಸಹಾಯಧನ
ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ದನಗಳ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ಯ ಇಲಾಖೆಗಳು ಮೊದಲು ನೀಡುತ್ತಿರುವ ಸಹಾಯಧನವನ್ನು ಹೆಚ್ಚಳ ಮಾಡಿ, ರಾಜ್ಯದ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿಯನ್ನು ನೀಡಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಅಂದರೆ 2022ರ ಸಾಲಿನ ಏಪ್ರಿಲ್ 1 ರಿಂದ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೂಲಿ ಕಾರ್ಮಿಕರ ಮೊತ್ತವನ್ನು ರೂಪಾಯಿ 289ರೂ.ನಿಂದ ರೂಪಾಯಿ 309ರೂ.ವರೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಮಿಕರ ಕೂಲಿ ಮೊತ್ತವನ್ನು ಹೆಚ್ಚಿಸಿ ಕೂಲಿಕಾರರಿಗೆ ಸಿಹಿಸುದ್ದಿ ನೀಡಿದೆ.
ರೈತರಿಗೆ ದನದ ಕೊಟ್ಟಿಗೆ(Danada shed) ಅಥವಾ ಶೆಡ್ ನಿರ್ಮಾಣದ ಬಗ್ಗೆ ಅಂದರೆ ಯಾರು ಹಸುಗಳು ಅಥವಾ ಎಮ್ಮೆಗಳನ್ನು ಸಾಕಿದ್ದಾರೋ ಅಥವಾ ನಿಮ್ಮ ಮನೆಯಲ್ಲಿ ಅಥವಾ ನಿಮ್ಮ ಮನೆ ಹಿಂದೆ ಇರುವ ಜಾಗದಲ್ಲಿ ಅಥವಾ ಎಲ್ಲಿ ನಿಮಗೆ ಸಂತ ಜಾಗವಿದೆಯೋ ಅಲ್ಲಿ ನೀವು ದನದ ಕೊಟ್ಟಿಗೆ ಅಥವಾ ದನದ ಶೆಡ್ ಅನ್ನು ನಿರ್ಮಾಣ ಮಾಡಲು ಪಂಚಾಯಿತಿ ವತಿಯಿಂದ ರೈತರಿಗೆ ಮತ್ತು ಆಸಕ್ತರಿಗೆ ಸಹಾಯಧನ ನೀಡಲಾಗುತ್ತದೆ.
ಸಾಮಾನ್ಯ ವರ್ಗದ ಜನರಿಗೆ ಸರಿ ಸುಮಾರು ರೂಪಾಯಿ 20,000 ರೂಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ವತಿಯಿಂದ ಅದನ್ನು ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸುಮಾರು 43,000ರೂಗಳ ಸಹಾಯಧನವನ್ನು ಈ ರಾಜ್ಯ ಸರ್ಕಾರದ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಪಂಚಾಯಿತಿ ಕಡೆಯಿಂದ ನೀಡುವ ಈ ಒಟ್ಟು ಮೊತ್ತದಲ್ಲಿ ಅಂದರೆ ಈ 43,000ರೂ.ಗಳಲ್ಲಿ, ಫಲಾನುಭವಿ ರೈತರಿಗೆ ಸುಮಾರು 8,996ರೂ.ಗಳನ್ನು ಅವರ ಕೂಲಿ ಮೊತ್ತವಾಗಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಈ ಸಹಾಯಧನವನ್ನು ನರೇಗಾ ಕಾರ್ಡ್ ಹೊಂದಿರುವ ರೈತರಿಗೆ ಅಥವಾ ಅರ್ಜಿದಾರರಿಗೆ ಮಾತ್ರ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಶೆಡ್ ಅಥವಾ ದನದ ಕೊಟ್ಟಿಗೆ ನಿರ್ಮಾಣ ಮಾಡಲಿಕ್ಕೆ ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಉಳಿದ ಮೊತ್ತವನ್ನು ಅಂದರೆ ಉಳಿದ 34,000ರೂ.ಗಳನ್ನು ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಾಮಾನ್ಯ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಇದರ ಅರ್ಧ ಮೊತ್ತ ಸಿಗುತ್ತಿತ್ತು. ಅಂದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ರೂಪಾಯಿ 8,996ರೂ.ಗಳ ಕೂಲಿಯನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಲ್ಲರಿಗೂ ಸಮಾನವಾದ ಕೂಲಿಯನ್ನು ನೀಡಲಾಗುತ್ತದೆ.
ಆದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಿಗುವ ಉಳಿದ 34,000ರೂ.ಗಳ ಹಣದಲ್ಲಿ ಸಾಮಾನ್ಯ್ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಈ 34,000ರೂ.ಗಳಲ್ಲಿ ಕೇವಲ ಅರ್ಧ ಮೊತ್ತವನ್ನು ನೀಡಲಾಗುತ್ತಿತ್ತು.
ಅಂದರೆ ಸರಿಸುಮಾರು 20,000ರೂ.ಗಳನ್ನು ಸಾಮಾನ್ಯ ವರ್ಗದವರಿಗೆ ಅಥವಾ ಜನರಲ್ ಕೆಟಗರಿಯವರಿಗೆ ಈ ಯೋಜನೆಯ ಅಡಿಯಲ್ಲಿ ಪಂಚಾಯಿತಿಯ ಕಡೆಯಿಂದ ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭ್ಯರ್ಥಿಗಳಿಗೆ ರೂಪಾಯಿ 43,000ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ.
ರೈತರು ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ದನದ ಕೊಟ್ಟಿಗೆ ಅಥವಾ ಶೆಡ್ ನ ಅಳತೆ ಎಷ್ಟಿರಬೇಕು?
• ರೈತರು ಈ ಯೋಜಯಡಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ಕಟ್ಟುವ ದನದ ಕೊಟ್ಟಿಗೆ ಅಥವಾ ಶೆಡ್ 5 ಫೀಟ್ ಎತ್ತರದ ಗೋಡೆಯನ್ನು ಹೊಂದಿರಬೇಕು.
• ಹಸುಗಳಿಗೆ ಮೇವು ಹಾಗೂ ನೀರಿನ ವ್ಯವಸ್ಥೆಗಾಗಿ ಗೋದಲಿಯನ್ನು ನಿರ್ಮಾಣ ಮಾಡಿರಬೇಕು.
• ಜಾನುವಾರುಗಳಿಗೆ ಶೆಡ್ ನಲ್ಲಿ ಗಾಳಿ ಮತ್ತು ಬೆಳಕು ಆಡಲು ಕೊಟ್ಟಿಗೆಗೆ ಶೆಡ್ ಶೀಟ್ಗಳನ್ನು ಹಾಕಬೇಕು.
•ಇವೆಲ್ಲವುದರ ಜೊತೆಗೆ ನೀವು ಈ ಯೋಜನೆಯಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನರೇಗಾ ನಾಮಫಲಕವನ್ನು ಕಡ್ಡಾಯವಾಗಿ ಹಾಕಬೇಕಾಗಿರುತ್ತದೆ.
• ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಿಕೊಳ್ಳಲು ರೈತರು ಮೊದಲನೆಯದಾಗಿ ತಮಗೆ ಸಂಬಂಧಪಟ್ಟ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ. ಅಂದರೆ ಈ ಯೋಜನೆಯಡಿಯಲ್ಲಿ ಯಾರ್ಯಾರು ಸಹಾಯ ಧನವನ್ನು ಪಡೆಯಬೇಕೆಂದು ಕೊಂಡಿದ್ದರೋ ಅಥವಾ ಈ ಯೋಜನೆಯ ಫಲಾನುಭವಿಯಾಗಲು ಬಯಸುವಂತಹ ಅರ್ಜಿದಾರರು ತಮ್ಮ ಹೆಸರನ್ನು ನಿಮಗೆ ಹತ್ತಿರವಿರುವ ಅಥವಾ ನಿಮಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಬೇಕಾಗಿರುತ್ತದೆ.
• ಪ್ರತಿವರ್ಷ ಜಾರಿಗೊಳಿಸುವ ಈ ಯೋಜನೆಯಲ್ಲಿ ನಿಮ್ಮ ಹೆಸರನ್ನು ಸೇರಿಸಬೇಕು. ಅಂದಾಗ ಮಾತ್ರ ನೀವು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
• ಇದಾದನಂತರ ಸಂಬಂಧಪಟ್ಟ ಪಂಚಾಯಿತಿಯ ಅಧಿಕಾರಿಗಳು ಬಂದು ನೀವು ದನದ ಕೊಟ್ಟಿಗೆ ಅಥವಾ ಶೆಡ್ಕಟ್ಟಬೇಕೆಂದು ಕೊಂಡಿರುವ ಖಾಲಿ ಜಾಗಕ್ಕೆ ಬಂದು ಭೇಟಿ ನೀಡಿ, ಆ ಜಾಗದ GPS ಅನ್ನು ಮಾಡಿ, ಆ ಜಾಗದ ಸರ್ವೆ ಮಾಡಿ ನಿಮಗೆ ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಅನುಮತಿಯನ್ನು ನೀಡುತ್ತಾರೆ.
• ಅದಾದ ನಂತರ ನೀವು ಕೊಟ್ಟಿಗೆ ಕಟ್ಟಲು ಬೇಕಾಗುವ ಸಾಮಗ್ರಿಗಳನ್ನು ಪಂಚಾಯಿತಿ ನೀಡುವ ಸಹಾಯಧನದಲ್ಲಿ ತಂದು ನಿಮ್ಮ ಕೊಟ್ಟಿಗೆ ಕಟ್ಟುವ ಕೆಲಸವನ್ನು ಪ್ರಾರಂಭಿಸಬಹುದು.
• ನೀವು ಕೊಟ್ಟಿಗೆ ಕಟ್ಟುವ ಕೆಲಸವನ್ನು ಶುರು ಮಾಡುವ ಮೊದಲು ಒಂದು ಕಲ್ಲಿನ ಬೋರ್ಡನ್ನು ಅಂದರೆ ನರೇಗಾ ನಾಮಫಲಕವನ್ನು ಬರೆಸಬೇಕಾಗಿರುತ್ತದೆ.
ಈ ಬೋರ್ಡ್ ನೀವು ಯಾವ ಯೋಜನೆಯಡಿ ಈ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದೀರಿ.ಎಂಬುದನ್
ಇದರಲ್ಲಿ ನೀವು ಯೋಜನೆ ಪಡೆಯುತ್ತಿರುವ ವರ್ಷ, ಗ್ರಾಮ ಪಂಚಾಯಿತಿ ಹೆಸರು, ತಾಲೂಕು ಮತ್ತು ಜಿಲ್ಲೆಯನ್ನು ಒಳಗೊಂಡಿರುತ್ತದೆ.
ಈ ನರೇಗಾ ನಾಮಫಲಕಾದಲ್ಲಿ ಫಲಾನುಭವಿಯ ಹೆಸರು ನಮೂದಿಸಲಾಗಿರುತ್ತದೆ.
ಹಾಗೂ ಅದೇ ರೀತಿ ಫಲಾನುಭವಿಯು ಈ ನರೇಗಾ ಉದ್ಯೋಗ ಖಾತರಿ ಯೋಜನೆಯನ್ನು ಪಡೆದುಕೊಳ್ಳುತ್ತಿರುವ ಕಾಮಗಾರಿ ಸಂಕೇತವನ್ನು ಒಳಗೊಂಡಿರುತ್ತದೆ.
ಈ ನರೇಗಾ ನಾಮಫಕದಲ್ಲಿ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಒಟ್ಟು ಬಿಡುಗಡೆಯಾದ ಮೊತ್ತ, ಎಷ್ಟು ಬಿಡುಗಡೆಯಾಗಿದೆ? ಯಾವುದಕ್ಕೆಲ್ಲ ಬಿಡುಗಡೆಯಾಗಿದೆ? ಖರ್ಚಾದ ಮೊತ್ತ ಮತ್ತು ಕೊಟ್ಟಿಗೆ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳ ಮೊತ್ತ, ಎಲ್ಲವನ್ನು ಒಳಗೊಂಡಿರುತ್ತದೆ.
ನರೇಗಾ ಯೋಜನೆಯ ಅಡಿಯಲ್ಲಿ ಸಹಾಯಧನ ಪಡೆದುಕೊಳ್ಳಲು ದನದ ಕೊಟ್ಟಿಗೆ ಹೇಗಿರಬೇಕು? ಅದರ ಉದ್ದ ಮತ್ತು ಅಳತೆಗಳು ಎಷ್ಟಿರಬೇಕು?
* ದನದ ಕೊಟ್ಟಿಗೆಯ ಅಗಲವು ಸುಮಾರು ನಾಲ್ಕು ಮೀಟರುಗಳಷ್ಟು ಇರಬೇಕು.
* ದನದ ಕೊಟ್ಟಿಗೆ ಅಥವಾ ಶೆಡ್ನ ಉದ್ದವು ಏಳು ಮೀಟರ್ಗಳಷ್ಟು ಇರಬೇಕು.
*ಅಂದರೆ ಸಾಮಾನ್ಯವಾಗಿ 22 ಅಡಿ ಉದ್ದ ಮತ್ತು13 ಅಡಿ ಅಗಲವನ್ನು ಹೊಂದಿರಬೇಕಾಗುತ್ತದೆ.
* ದನದ ಕೊಟ್ಟಿಗೆಯು ಕನಿಷ್ಠ ಅಗಲ ಮತ್ತು ಉದ್ದವಗಳನ್ನು ಹೊಂದಿರಬೇಕಾಗುತ್ತದೆ.
* ಇದಕ್ಕಿಂತ ಕಡಿಮೆ ಉದ್ದ ಮತ್ತು ಅಗಲಗಳ ಅಳತೆಗಳನ್ನು ಹೊಂದಿದ್ದರೆ ನಿಮಗೆ ಸಿಗುವ ಸಹಾಯಧನದಲ್ಲಿ ಮೊತ್ತವು ಕಡಿಮೆಯಾಗುತ್ತದೆ. ಅಂದರೆ ನಿಮಗೆ ಸಿಗುತ್ತಿರುವ ಸಾಮಗ್ರಿ ಮೊತ್ತದಲ್ಲಿ ಸಹಾಯಧನ ಕಡಿಮೆಯಾಗುತ್ತದೆ.
* ಇದಕ್ಕಿಂತ ಜಾಸ್ತಿ ಉದ್ದ ಮತ್ತು ಅಗಲಗಳನ್ನು ಹೊಂದಿರಬಹುದು. ಆದರೆ ಈ ಕನಿಷ್ಠ ಅಳತೆಗಳ ಕೆಳಗೆ ಅಳತೆಗಳನ್ನು ಹೊಂದಿರಬಾರದು.
* ದನದ ಕೊಟ್ಟಿಗೆ ನಿರ್ಮಾಣದ ಸಮಯದಲ್ಲಿ ದನಗಳನ್ನು ಕಟ್ಟುವ ಜಾಗದಲ್ಲಿ ನೆಲವನ್ನು ಕಾಂಕ್ರೀಟ್ ನಿಂದ ಮಾಡಿರಬೇಕಾಗಿರುತ್ತದೆ. ಯಾವುದೇ ತರದ ಚಪ್ಪಡಿ ಕಲ್ಲುಗಳನ್ನು ಮತ್ತು ಇನ್ನಿತರೆ ರಬ್ಬರ್ ಮ್ಯಾಟ್ ಅಥವಾ ನೆಲಹಾಸುಗಳನ್ನು ಬಳಸುವಂತಿಲ್ಲ. ನೀವು ನೆಲವನ್ನು ಕಾಂಕ್ರಿಟ್ ನಿಂದ ಮಾಡಿರದಿದ್ದರೆ ನಿಮಗೆ ಸಹಾಯಧನವನ್ನು ನೀಡಲು ಬರುವುದಿಲ್ಲ.
ಮೊದಲು ನೀವು ದನದ ಕೊಟ್ಟಿಗೆ ನಿರ್ಮಾಣ ಮಾಡಬೇಕೆಂದುಕೊಳ್ಳುವ ಖಾಲಿ ಜಾಗದಲ್ಲಿ ಫೋಟೋ ತೆಗೆಯಬೇಕು. ನಂತರ 40MM ಜೆಲ್ಲಿ ಕಲ್ಲು ಅಂದರೆ(ಕಡಿಗಳು) ಗಳನ್ನು ಹಾಕಿ ಸಮತಟ್ಟು ಮಾಡಬೇಕಾಗಿರುತ್ತದೆ. ಇದಾದ ನಂತರ ಅದರ ಮೇಲೆ ಕಾಂಕ್ರೆಟ್ ನಿಂದ ನೆಲವನ್ನು ಮುಚ್ಚಬೇಕಾಗುತ್ತದೆ.
* ದನಗಳ ಕೊಟ್ಟಿಗೆಯಲ್ಲಿ ಮೇವು ಅಥವಾ ನೀರಿನ ಸೌಲಭ್ಯಕ್ಕಾಗಿ ಗೋದಲಿಯನ್ನು ಇಟ್ಟಿಗೆಯನ್ನು ಬಳಸಿ ಕಟ್ಟಬೇಕು. ಕಟ್ಟಿದ ನಂತರ ಇಟ್ಟಿಗೆಗಳನ್ನು ಪ್ಲಾಸ್ಟರ್ ನಿಂದ ಮುಚ್ಚಬೇಕು.
* ಹಾಗೆಯೇ ದನಗಳನ್ನು ಗೋದಲಿಗೆ ಕಟ್ಟಲು ಕಬ್ಬಿಣದ ಬಳೆಗಳನ್ನು ಸಹ ಬಳಸಬಹುದು.
* ದನಗಳ ಮೂತ್ರ ಮತ್ತು ಕೊಟ್ಟಿಗೆ ತೊಳೆದ ನಂತರ ಅದರ ನೀರು ಸುಲಭವಾಗಿ ಹೋಗಲು ಒಂದು ಗುಂಡಿ ಅಥವಾ ಒಂದು ಚರಂಡಿ ವ್ಯವಸ್ಥೆಯನ್ನು ಮಾಡಬೇಕಾಗಿರುತ್ತದೆ. ಅಥವಾ ನಿಮಗೆ ಚರಂಡಿ ವ್ಯವಸ್ಥೆ ಇಲ್ಲದಿದ್ದಲ್ಲಿ ನೀರನ್ನು ಇಂಗು ಗುಂಡಿಗೆ ಬಿಡಬಹುದು.
* ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ದನದ ಕೊಟ್ಟಿಗೆಯ ಸುತ್ತಲೂ ಗೋಡೆಯನ್ನು ಕಟ್ಟಬೇಕಾಗುತ್ತದೆ.
* ಈ ಕೊಟ್ಟಿಗೆಯನ್ನ ನಿರ್ಮಾಣ ಮಾಡಲು ಸಾಮಾನ್ಯವಾಗಿ 22,000ರೂ.ಗಳ ಖರ್ಚು ಬರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಒಟ್ಟು ಸಹಾಯಧನ 43,000ರೂ.ಗಳು ಬರುತ್ತದೆ.
ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನ ಹೆಚ್ಚಳ ಮಾಡಿದ ನಂತರ ಒಟ್ಟು ಸಹಾಯಧನವಾಗಿ 57,000 ರೂ ಸಿಗುತ್ತದೆ. ಈ ಮೊತ್ತವನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೂ ಸಮವಾಗಿ ನೀಡಲಾಗುತ್ತದೆ. ಈ ಮೊತ್ತದಲ್ಲಿ ಅಂದರೆ ಒಟ್ಟಾರೆ 57,000ರೂ.ಗಳಲ್ಲಿ ಸರಿ ಸುಮಾರು 10,556ರೂ.ಗಳನ್ನು ಕೂಲಿ ಮೊತ್ತವಾಗಿ ಈ ಯೋಜನೆಯಡಿ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಸುಮಾರು 46,644ರೂ.ಗಳನ್ನು ಈ ಯೋಜನೆಯಡಿಯಲ್ಲಿ ದನದ ಕೊಟ್ಟಿಗೆ ಅಥವಾ ದನದಶೆಡ್ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಈ ಯೋಜನೆಯ ಅಡಿಯಲ್ಲಿ ಸಹಾಯಧನ ನೀಡಲಾಗುತ್ತದೆ.
ಫಲಾನುಭವಿಗಳು ಜಾನುವಾರು ಶೆಡ್ ಅಥವಾ ಕೊಟ್ಟಿಗೆಯನ್ನು ನಿರ್ಮಿಸಿಕೊಳ್ಳಲು,
#ಕನಿಷ್ಠ 4 ಜಾನುವಾರುಗಳನ್ನು ಹೊಂದಿರಬೇಕು.
#ಸಂಬಂಧಪಟ್ಟ ಪಶುವೈದ್ಯಾಧಿಕಾರಿಗಳಿಂದ ಜಾನುವಾರು ಇರುವ ಕುರಿತ ದೃಢೀಕರಣ ಪತ್ರವನ್ನು ಪಡೆಯಬೇಕು.
#ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಉದ್ಯೋಗ ಖಾತರಿ ಚೀಟಿ ಪುಸ್ತಕವನ್ನು ಹೊಂದಿರಬೇಕು.
#ಈ ಮೇಲಿನ ಉಲ್ಲೇಕಿಸಿದ ದಾಖಲಾತಿಗಳೊಂದಿಗೆ ಸ್ಥಳೀಯ ಗ್ರಾಮ ಪಂಚಾಯತಿಗೆ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
# ಗ್ರಾಮ ಪಂಚಾಯಿತಿಯವರ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಫಲಾನುಭವಿಯ ಹೆಸರು ಸೇರಿಸಿಕೊಂಡು ಮೇಲಾಧಿಕಾರಿಗಳಿಂದ ಅನುಮೋದನೆ ಪಡೆದ ನಂತರ ರೈತರು ಅವರ ದನದ ಕೊಟ್ಟಿಗೆಯ ಕಾಮಗಾರಿಯನ್ನು ಪ್ರಾರಂಭಿಸಬೇಕು.
# ಈ ಹಿಂದೆ ಉದ್ಯೋಗ ಖಾತರಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 43,000ರೂ.ಗಳ ಸಹಾಯಧನ ಹಾಗೂ ಸಾಮಾನ್ಯ ವರ್ಗದವರಿಗೆ 19,000 ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನೀಡಲಾಗುತ್ತಿತ್ತು.
ಈ ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚಿಸಿದ ಸಹಾಯಧನದ ಬಗ್ಗೆ ತಿಳಿಯಬೇಕೆಂದರೆ,
ಸಾಮಾನ್ಯ ವರ್ಗದವರಿಗೂ ಸಹ 57,000ರೂ.ಗಳ ಸಹಾಯಧನ ಈ ಯೋಜನೆ ಅಡಿಯಲ್ಲಿ ನೀಡಲಾಗುವುದು. ಸಾಮಾನ್ಯವಾಗಿ 4 ಕ್ಕಿಂತ ಹೆಚ್ಚು ಜಾನುವಾರು ಸಾಕಣೆ ಮಾಡುವವರು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.
ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಜಾನುವಾರು ಸೆಡ್ ನಿರ್ಮಾಣಕ್ಕೆ ಸಹಾಯಧನದ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ರಾಜ್ಯದಲ್ಲಿ ಈ ಯೋಜನೆಯ ಲಾಭವನ್ನು ಪಡೆದುಕೊಂಡು ಸಹಸ್ರಾರು ಕುಟುಂಬಗಳು ಶೆಡ್ ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡು ಜಾನುವಾರು ಸಾಕಣೆಯೊಂದಿಗೆ ಉತ್ತಮ ಆದಾಯ ಮಾಡಿಕೊಳ್ಳುತ್ತಿದ್ದಾರೆ.
ಇದೀಗ ದನದ ಶೆಡ್ ನಿರ್ಮಾಣ ಮಾಡಿಕೊಳ್ಳಲು ಸಹಾಯ ಧನ ಹೆಚ್ಚಿಸಿದೆ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಅಥವಾ ಸಂಬಂಧಪಟ್ಟ ಪಂಚಾಯಿತಿಯನ್ನು ಸಂಪರ್ಕಿಸಿರಿ.
]]>
ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೃಷಿ ಸಾಲದ ಮಿತಿಯನ್ನು ₹2 ಲಕ್ಷಕ್ಕೆ ಏರಿಕೆ ಮಾಡಿದೆ.
ಹೌದು, ರೈತರ ಕೃಷಿ ಚಟುವಟಿಕೆಗಳಿಗೆ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ನೆರವಾದ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಇದೀಗ ಕೃಷಿ ಸಾಲದ ಮಿತಿಯನ್ನು ₹2 ಲಕ್ಷಕ್ಕೆ ಏರಿಕೆ ಮಾಡಿದೆ.
ರೈತರ ಮೇಲಿನ ಆರ್ಥಿಕ ಒತ್ತಡವನ್ನು ತಗ್ಗಿಸಲು ಮತ್ತು ಹೆಚ್ಚುತ್ತಿರುವ ಕೃಷಿ ಇನ್ಪುಟ್ ವೆಚ್ಚಗಳನ್ನು ಪರಿಹರಿಸಲು, ಭಾರತೀಯ ರಿಸರ್ವ್ ಬ್ಯಾಂಕ್ (RBI) ಆಧಾರ ರಹಿತ ಕೃಷಿ ಸಾಲದ ಮಿತಿಯನ್ನು ₹ 1.6 ಲಕ್ಷದಿಂದ ₹ 2ಲಕ್ಷಕ್ಕೆ ಏರಿಸಿದೆ.
ಪರಿಷ್ಕೃತ ಮಿತಿ 1 ಜನವರಿ 2025 ರಿಂದ ಜಾರಿಗೆ ಬರಲಿದ್ದು, ದೇಶಾದ್ಯಂತ ಲಕ್ಷಾಂತರ ರೈತರಿಗೆ ಪ್ರಯೋಜನವನ್ನು ನಿರೀಕ್ಷಿಸಲಾಗಿದೆ ಎಂದು ಕೃಷಿ ಸಚಿವಾಲಯ ತಿಳಿಸಿದೆ.
ಈ ಕ್ರಮ ಮಾರ್ಪಡಿಸಿದ ಬಡ್ಡಿ ಸಬ್ವೆನ್ಶನ್ ಸ್ಕೀಮ್ (MISS) ನಂತಹ ಸರ್ಕಾರಿ ಉಪಕ್ರಮಗಳೊಂದಿಗೆ ಹೊಂದಿಕೆಯಾಗುತ್ತದೆ, ಇದು ತ್ವರಿತವಾಗಿ ಪಾವತಿಸುವವರಿಗೆ ಸಬ್ಸಿಡಿ 4% ಬಡ್ಡಿದರದಲ್ಲಿ ₹3 ಲಕ್ಷದವರೆಗಿನ ಸಾಲಗಳನ್ನು ನೀಡುತ್ತದೆ. ಒಟ್ಟಾರೆಯಾಗಿ, ಈ ಕ್ರಮಗಳು ಸುಸ್ಥಿರ ಕೃಷಿ ಪದ್ಧತಿಗಳನ್ನು ಹೆಚ್ಚಿಸಲು ಮತ್ತು ಗ್ರಾಮೀಣ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ಕಾರ್ಯತಂತ್ರದ ಭಾಗವಾಗಿದೆ.
ನಿಮ್ಮ ಹೊಲದ ಮೇಲೆ ಎಷ್ಟು ಸಾಲ ಇದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೋಲೆ ಕ್ಲಿಕ್ ಮಾಡಿ
https://landrecords.karnataka.gov.in/Service2/
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಪಹಣೆಯಲ್ಲಿ ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
Bele sala-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ-crop loan status - https://krushirushi.in/Bele-sala-crop-loan-status-1638
]]>
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
ಇದನ್ನೂ ಓದಿ
Koli sakanike-ಉಚಿತ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ - https://krushirushi.in/Koli-sakanike-1712
ಪಿಎಂಕಿಸಾನ್ 19ನೇ ಕಂತಿನ ದಿನಾಂಕ ಪ್ರಕಟ,ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು-Pmkisan 19th instalment date - https://krushirushi.in/Pmkisan-19th-instalment-date-1710
Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ - https://krushirushi.in/Tahasildar-varification-status-approved-1634
ಈ ಜಿಲ್ಲೆಯ 15 ಸಾವಿರ ರೈತರಿಗೆ 7.5 ಕೋಟಿ ಬೆಳೆ ಪರಿಹಾರ ಬಿಡುಗಡೆ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ-Input subsidy for crop loss - https://krushirushi.in/Input-subsidy-for-croploss-1724
ಪಿಎಂಕಿಸಾನ್ 19ನೇ ಕಂತಿನ ದಿನಾಂಕ ಪ್ರಕಟ,ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು-Pmkisan 19th instalment date - https://krushirushi.in/Pmkisan-19th-instalment-date-1723
Parihara karnataka-ಗುಂಟೆಗೆ 87 ರೂಪಾಯಿಯಂತೆ ಎಕರೆಗೆ 3480 ರೂಪಾಯಿ ಬೆಳೆಪರಿಹಾರ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-Karnataka-1722
Pmkisan 19th instalment-ಪಿಎಂ ಕಿಸಾನ್ 19ನೇ ಕಂತಿಗೆ ಈ 3 ಕೆಲಸ ಕಡ್ಡಾಯ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Pmkisan-19th-instalment-1721
Belevime-25.03 ಲಕ್ಷ ರೈತರಿಗೆ 2019.69 ಕೋಟಿ ಬೆಳೆವಿಮೆ ಪರಿಹಾರ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Belevime
]]>
ಹಾವೇರಿ ಜಿಲ್ಲೆಯ 15 ಸಾವಿರ ರೈತರಿಗೆ 7.5 ಕೋಟಿ ಬೆಳೆ ಪರಿಹಾರ ಬಿಡುಗಡೆ, ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಬೆಳೆ ಪರಿಹಾರ ಜಮಾ ಪ್ರಾರಂಭವಾಗಿದ್ದು, ನಿಮ್ಮ ಜಮಾ ಸ್ಟೇಟಸ್ ಈ ಕೆಳಗಿನಂತೆ ಚೆಕ್ ಮಾಡಿಕೊಳ್ಳಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಡಿಸೆಂಬರ್ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ₹120 ಕೋಟಿವರೆಗೆ ನಷ್ಟ ಆಗಿರಬಹುದು ಎ೦ದು ಅ೦ದಾಜಿಸಲಾಗಿದೆ. ಬೆಳೆ ಹಾನಿಯಾದ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಹಣ ಜಮೆಯಾಗಲಿದೆ''
ಬೆಳೆಹಾನಿ ಪರಿಹಾರ ಜಮಾ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service87/
ನಂತರ ನಿಮ್ಮ ಜಿಲ್ಲೆ, ತಾಲೂಕು, ಹೊಬಳಿ, ಗ್ರಾಮ, ವರ್ಷ, ಹಂಗಾಮು ಹಾಗೂ ಬೆಳೆಹಾನಿ ಕಾರಣ select ಮಾಡಿ,Get report ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(bele hani parihara) ಜಮಾ ಮಾಹಿತಿ ದೊರೆಯಲಿದೆ
ನಂತರ view status ಮೇಲೆ ಕ್ಲಿಕ್ ಮಾಡಿ
ನಂತರ "ಆಧಾರ್ ಸಂಖ್ಯೆ/Aadhar number" ಮೇಲೆ ಕ್ಲಿಕ್ ಮಾಡಿ
ನಂತರ calamity type "Flood" ಎಂದು ಋುತು "2024-25" ಎಂದು select ಮಾಡಿ
ನಂತರ ನಿಮ್ಮ ಆಧಾರ್ ನಂಬರ್/Aadhar number ಹಾಕಿ,captch code ಹಾಕಿ,ವಿವರಗಳನ್ನು ಪಡೆಯಲು/Fetch details ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪರಿಹಾರ ಹಣ ಜಮಾ ಸ್ಟೇಟಸ್ ತಿಳಿಯಲಿದೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಮೊದಲು know your status ಮೇಲೆ ಕ್ಲಿಕ್ ಮಾಡಿ
ನಂತರ know your register number ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ
ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 16 ಕಂತುಗಳ ಮಾಹಿತಿ ದೊರೆಯಲಿದೆ.
ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ
ನಂತರ update your details ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ
Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.
ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ
Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.
FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ ಕಾರಣ ಮತ್ತು ಪರಿಹಾರ
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
fruitspmk.gov.in ಪೋರ್ಟಲ್ ನಲ್ಲಿ |
|||
1 |
ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ |
ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು |
ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ (NIC) ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ. ಆ) ಸಮಸ್ಯಾತ್ಮಕ ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ. |
2 |
ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು |
ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ |
ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ |
3 |
ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು |
ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ |
ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ |
4 |
ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ |
ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ |
OPERATOR ಲಾಗಿನ್ (RSK, ADA office, JDA office) OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು |
5 |
01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ |
ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ |
ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ) |
6 |
Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು |
ಜಿಲ್ಲೆಗಳಲ್ಲಿ OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ |
AAO ಲಾಗಿನ್ (RSK, ADA office, JDA office) AAO ಲಾಗಿನ್ನಲ್ಲಿ ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ, ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
7 |
ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ |
ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ) |
AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ. |
8 |
PFMS rejected |
Aadhaar Number is not seeded in NPCI |
ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ |
Bank Name And IFSC Code are not related to each other |
ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ |
||
Bank Name is not as per PFMS Bank Master. |
|||
Beneficiary is rejected as Account Type is other than SB / SBA / JD |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ) |
||
Duplicate Beneficiary Name , Bank Account No and Bank Name not allowed for same scheme |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
IFSC Code either not present or currently inactive in tbl BankBranch |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
Incorrect Aadhaar Number |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
One or more mandatory tags values are missing. |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
||
Rejected by Bank, Account No does not exist in Bank/INVALID/CLOSED |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
9 |
Amount credited to Account Number-NA |
Aadhaar number based payment by GoI |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ. |
10 |
PAYMENT STOPPED BY STATE |
XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ |
ಕೇಂದ್ರ ಸರ್ಕಾರ |
11 |
Transaction failed |
ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ. |
12 |
ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ |
OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ |
ಕೇಂದ್ರ ಸರ್ಕಾರ |
13 |
ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು |
ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ. |
ಕೇಂದ್ರ ಸರ್ಕಾರ ದ pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ. |
ಬೆಳೆ ಸಮೀಕ್ಷೆ(Bele samikshe) ಮೂಲಕ ಸಂಗ್ರಹಿಸಲಾದ ಬೆಳೆ
ಮಾಹಿತಿ ಕುರಿತು ಆಕ್ಷೇಪಣೆ ಸಲ್ಲಿಸಲು ನ. 20ರವರೆಗೆ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ ದರ್ಶಕ ಮೊಬೈಲ್ ಆ್ಯಪ್(Bele darshaka App)ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ(Crop survey portal) ಮೂಲಕ ಆಕ್ಷೇಪಣೆ ಸಲ್ಲಿಸಬಹುದು.
ಬೆಳೆ ಸಮೀಕ್ಷೆ ದತ್ತಾಂಶವನ್ನು ಬೆಳೆವಿಮೆ(Bele vime), ಬೆಂಬಲ ಬೆಲೆ ಯೋಜನೆಯಡಿ(MSP) ಬೆಳೆ ಮಾರಾಟ ಮಾಡಲು, ಬೆಳೆ ನಷ್ಟ ಪರಿಹಾರ(bele hani) ಹಾಗೂ ಇತರ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಳಕೆ ಮಾಡಲಾಗುವುದು. ಆದ್ದರಿಂದ ರೈತರು ತಾವು ಬೆಳೆದ ಬೆಳೆ ಹಾಗೂ ಬೆಳೆ ಸಮೀಕ್ಷೆಯಲ್ಲಿ (crop survey)ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಖಾತ್ರಿಪಡಿಸಿಕೊಳ್ಳಬೇಕು. ಒಂದು ವೇಳೆ ಭಿನ್ನವಾಗಿದ್ದಲ್ಲಿ, ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ನಂತರದ ಆಕ್ಷೇಪಣೆ ಸ್ವೀಕರಿಸಲಾಗುವುದಿಲ್ಲ.
ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಗೂಗಲ್ ಪ್ಲೇ ಸ್ಟೋರ್ ಮೂಲಕ ಅಥವಾ https://play.google.com/
ನಂತರ ರೈತ select ಮಾಡಿ
ನಂತರ ವರ್ಷ,ಋುತು, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ.
ನಂತರ ಸರ್ವೇ ನಂಬರ್ ಹಾಕಿ,ಹಿಸ್ಸಾಆಯ್ಕೆ ಮಾಡಿ,ಸಮೀಕ್ಷೆಯ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ನಂತರ ಬೆಳೆವಿವರ ವೀಕ್ಷಿಸಿ ಮೇಲೆ ಕ್ಲಿಕ್ ಮಾಡಿ
ನಂತರ photo ಮೇಲೆ ಕ್ಲಿಕ್ ಮಾಡಿದರೆ ನೀವು ಬೆಳೆದ ಬೆಳೆ ಹಾಗೂ ಫೋಟೊ ಅಪ್ಲೊಡ್ ಸರಿಯಾಗಿರುವುದನ್ನು ಪರಿಕ್ಷೀಸಿ.
ಬೆಳೆ ಸಮಿಕ್ಷೆ ಸರಿಯಾಗಿರದಿದ್ದರೆ,ಮತ್ತೆ ಬೆಳೆ ಸಮಿಕ್ಷೆ ಮಾಡಿ ಸರಿಪಡಿಸಲು ಅವಕಾಶವಿರುತ್ತದೆ.
ಏನಿದು ಬೆಳೆ ದರ್ಶಕ ಆ್ಯಪ್?
ಈ ಅಪ್ಲಿಕೇಶನ್ ಮಾಡಿದ ಉದ್ದೇಶ ಬೆಳೆ ಸಮೀಕ್ಷೆಯನ್ನು (Crop survey)ನೋಡಲು.. ಇದರಲ್ಲಿ ನೀವು ಅಪ್ಲೋಡ್ ಮಾಡಿದ ಚಿತ್ರಗಳನ್ನು ಮತ್ತು ಸಮೀಕ್ಷೆ ಮಾಡಿದ ಸರ್ವೇಯರ್ ವಿವರಗಳನ್ನು ನೋಡಬಹುದು.
ತಮ್ಮ ಮೊಬೈಲ್ ಮೂಲಕ ಬೆಳೆಗಳ ಸಮೀಕ್ಷೆ(Bele samikshe) ಮಾಡಬಹುದು. ಅಥವಾ ನೆರೆಯ ಖಾಸಗಿ ವ್ಯಕ್ತಿಗಳ (Private resident) ಮೊಬೈಲ್ ಮೂಲಕ ಜಮೀನುಗಳ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ನಿಮ್ಮ ಜಮೀನಿನ ಸರ್ವೆ ನಂಬರ್(Survey number) ಮತ್ತು ಜಮೀನಿನ ಫೊಟೋ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಮೊಬೈಲ್ ನಲ್ಲಿ Bele darshak app ಮೂಲಕ ಕ್ಷಣಾರ್ಧದಲ್ಲಿ ನೋಡಬಹುದು. ಒಂದು ವೇಳೆ ತಪ್ಪಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು.
ಬೆಳೆ ದರ್ಶಕ್ ಆ್ಯಪ್(bele darshaka app) ಇನ್ಸ್ ಸ್ಟಾಲ್ ಮಾಡಿಕೊಂಡ ನಂತರ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಇನ್ನಿತರ ಮಾಹಿತಿ ನಮೂದಿಸಬೇಕು. ಬೆಳೆ ದರ್ಶಕ್ ಆ್ಯಪ್(Bele darshaka application) ಮೂಲಕ ಜಮೀನಿನಲ್ಲಿ ಬೆಳೆ ಸಮೀಕ್ಷೆ (Bele samikshe)ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ (Crop survey)ಸಮಯದಲ್ಲಿ ತೆಗೆಯಲಾದ ಜಿಪಿಎಸ್ ಆಧಾರಿತ (GPS Photo)ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ಅಲ್ಲದೆ ರೈತರ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ, (Mobile number)ರೈತರು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ನೋಡಬಹುದು.
ಒಂದು ವೇಳೆ ಮಾಹಿತಿ ತಪ್ಪಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು.ಮೇಲ್ವಿಚಾರಕರು ಸೂಕ್ತ ಬೆಳೆಗಳನ್ನು ದಾಖಲಿಸಿ ರೈತರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುತ್ತಾರೆ. ಇನ್ನೇಕೆ ತಡ ಒಮ್ಮೆ ನಿಮ್ಮ ಬೆಳೆ ಸಮೀಕ್ಷೆಯಲ್ಲಿ ಎಲ್ಲಾ ಸರ್ವೆ ನಂಬರ್, ಮಾಹಿತಿ ಹಾಗೂ ಫೋಟೋ ಸರಿಯಾಗಿ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಡಿ
]]>ಕರ್ನಾಟಕ ರೈತ ಸುರಕ್ಷಾ - ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ(Pardan mantri fasal Bheema Yojana)
2023-24: 25.03 ಲಕ್ಷ ರೈತರು 20.53 ಲಕ್ಷ ಹೆಕ್ಟೇರ್ನಲ್ಲಿ ನೋಂದಾಯಿಸಿ, ₹2019.69 ಕೋಟಿ ಪರಿಹಾರ ಪಡೆದಿದ್ದಾರೆ!
ಹಿಂದಿನ ವರ್ಷಗಳಲ್ಲಿ 22,572 ರೈತರಿಗೆ ₹286.89 ಕೋಟಿ ಪರಿಹಾರ ನೀಡಲಾಗಿದೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯಡಿ(Pradan mantri ujwal yojane) ಉಚಿತವಾಗಿ ಅನಿಲ ಸಂಪರ್ಕ ಪಡೆಯದೇ ಅವಕಾಶ ವಂಚಿತರಾಗಿರುವ ಬಿಪಿಎಲ್ ಕಾರ್ಡ್(BPL card holder) ಹೊಂದಿರುವ ಮಹಿಳೆಯರಿಗೆ ಸಿಹಿ ಸುದ್ದಿ. ಮತ್ತೆ ಗ್ಯಾಸ್ ಸಂಪರ್ಕ ಪಡೆಯುವ ಅವಕಾಶವನ್ನು ಕೇಂದ್ರ ಸರಕಾರ ಕಲ್ಪಿಸಿದ್ದು, ಗ್ರಾಹಕರು ನೇರವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಗ್ಯಾಸ್ ಸಂಪರ್ಕ ನೀಡುವ ನಾನಾ ತೈಲ ಕಂಪನಿಯ ಗ್ಯಾಸ್ ಏಜೆನ್ಸಿಗಳನ್ನು ಗ್ರಾಹಕರೇ ನೇರವಾಗಿ ಆಯ್ಕೆ ಮಾಡಿಕೊಂಡು ಉಜ್ವಲ್ ಯೋಜನೆಯಡಿ ಸಂಪರ್ಕ ನೀಡುವಂತೆ ಆನ್ಲೈನ್ ಮೂಲಕ ಅರ್ಜಿಯೊಂದಿಗೆ ಅಗತ್ಯ ದಾಖಲಾತಿ ಸಲ್ಲಿಸಬೇಕಿದೆ.
ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯಡಿ ಈಗಾಗಲೇ ದೇಶದೆಲ್ಲೆಡೆ 10.35 ಕೋಟಿ ಮಂದಿಗೆ ಅನಿಲ ಸಂಪರ್ಕ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರವೇ ದೇಶದಲ್ಲಿರುವ ಬಿಪಿಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳ ಮಾಹಿತಿ ಇರುವ ಎಸ್ಇಸಿಸಿ ದತ್ತಾಂಶವನ್ನು ಐಒಸಿ, ಎಚ್ಪಿಸಿಎಲ್, ಬಿಪಿಸಿಎಲ್ ತೈಲ ಕಂಪನಿಗಳಿಗೆ ನೀಡಿದ್ದು, ತೈಲ ಕಂಪನಿಗಳು ಉಜ್ವಲ್ ಯೋಜನೆಯಡಿ ತಮ್ಮ ವ್ಯಾಪ್ತಿಯಲ್ಲಿರುವ ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಕಡ್ಡಾಯವಾಗಿ ಅನಿಲ ಸಂಪರ್ಕ ಕಲ್ಪಿಸುವಂತೆ ಗ್ಯಾಸ್ ಏಜೆನ್ಸಿಗಳಿಗೆ ಟಾರ್ಗೆಟ್ ನೀಡಲಾಗಿತ್ತು.
ಪರಿಣಾಮ ಗ್ಯಾಸ್ ಏಜೆನ್ಸಿಗಳ ಮಾಲೀಕರು, ತಮಗೆ ನೀಡಿದ್ದ ಗುರಿ ತಲುಪಲು ನಗರ ಸೇರಿದಂತೆ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿರುವ ಕಡು ಬಡ ಕುಟುಂಬಗಳನ್ನು ಪತ್ತೆ ಹಚ್ಚಿ ಅವರಿಗೆ ಉಚಿತವಾಗಿ ಗ್ಯಾಸ್ ಸಂಪರ್ಕ ನೀಡುವ ಮೂಲಕ ಯೋಜನೆಯ ಯಶಸ್ವಿಗೆ ಶ್ರಮಿಸಿದ್ದರು. ಮೈಸೂರಿನಲ್ಲಿಯೇ 50 ಸಾವಿರಕ್ಕೂ ಹೆಚ್ಚು ಮಂದಿ ಉಜ್ವಲ್ ಯೋಜನೆಯ ಫಲಾನುಭವಿಗಳಿದ್ದಾರೆ.
ಏನೆಲ್ಲಾ ನೀಡುತ್ತಾರೆ?ಮೈಸೂರು ಸೇರಿದಂತೆ ರಾಜ್ಯದೆಲ್ಲೆಡೆ ನಿಗದಿತ ಗುರಿಗಿಂತ ಹೆಚ್ಚು ಮಂದಿಗೆ ಉಜ್ವಲ್ ಯೋಜನೆಯಡಿ ಅನಿಲ ಸಂಪರ್ಕ ಕಲ್ಪಿಸಿ, ಗ್ಯಾಸ್ ಸಂಪರ್ಕದೊಂದಿಗೆ ಸ್ಟೌ, ರೆಗ್ಯುಲೇಟರ್, ರಬ್ಬರ್ ಟ್ಯೂಬ್ಗಳನ್ನು ನೀಡಲಾಗಿತ್ತು. ಈ ಹೆಚ್ಚುವರಿ ಹಣವನ್ನು ಕಂತಿನ ರೂಪದಲ್ಲಿಪಡೆಯಲು ಗ್ರಾಹಕರಿಗೆ ನೀಡಲಾಗುತ್ತಿದ್ದ ಸಬ್ಸಿಡಿ ಹಣವನ್ನು ಕಡಿತಗೊಳಿಸಲಾಗುತ್ತಿತ್ತು.
75 ಲಕ್ಷ ಮಂದಿಗೆ ಅನಿಲ ಸಂಪರ್ಕಕ್ಕೆ ನಿರ್ಧಾರಈ ಮಧ್ಯೆ ಉಜ್ವಲ್ ಯೋಜನೆಯಡಿ ಅನಿಲ ಸಂಪರ್ಕ ಪಡೆದ ಗ್ರಾಹಕರಿಗೆ ಸಬ್ಸಿಡಿ ಹಣ ಕೂಡ ಖೋತಾ ಆಗಿದೆ. ಈಗ ಮತ್ತೆ ಕೇಂದ್ರ ಸರಕಾರ ಸಬ್ಸಿಡಿ ನೀಡುವುದನ್ನು ಪುನಾರಂಭಿಸುವುದರೊಂದಿಗೆ ಹೊಸದಾಗಿ ಉಜ್ವಲ್ ಯೋಜನೆಯಡಿ 75 ಲಕ್ಷ ಮಂದಿಗೆ ಅನಿಲ ಸಂಪರ್ಕ ನೀಡಲು ನಿರ್ಧರಿಸಿದೆ.
ಬೇಗ ಅರ್ಜಿ ಸಲ್ಲಿಸಿದವರಿಗೆ ಅವಕಾಶ''ಯಾವುದೇ ಜಿಲ್ಲೆ, ರಾಜ್ಯಕ್ಕೆ ಇಂತಿಷ್ಟು ಎಂದು ನಿಗದಿ ಮಾಡದೇ ಇರುವುದರಿಂದ ಬೇಗ ಅರ್ಜಿ ಸಲ್ಲಿಸಿದವರು, ಯೋಜನೆಯ ಫಲಾನುಭವಿಗಳಾಗಬಹುದು'' ಎನ್ನುತ್ತಾರೆ ಅಮರ್ದೀಪ್ ಗ್ಯಾಸ್ ಏಜೆನ್ಸಿಯ ಮಾಲೀಕ ಮೆಹುಲ್ ಜೆ.ಪಟೇಲ್.
ಆನ್ಲೈನ್ನಲ್ಲಿಅರ್ಜಿ ಸಲ್ಲಿಸುವುದೇಗೆ? ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರು ನೇರವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವೆಬ್ಸೈಟ್ನಲ್ಲಿ ಹೆಸರು, ವಿಳಾಸ, ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್ ಸಂಖ್ಯೆಯನ್ನು ಅಪ್ಲೋಡ್ ಮಾಡಬೇಕು. ಗ್ರಾಹಕರು ತಮಗೆ ಬೇಕಾದ ಗ್ಯಾಸ್ ಏಜೆನ್ಸಿಗಳಿಂದ ಸಂಪರ್ಕ ಪಡೆಯಲು ತಾವೇ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಯೋಜನೆಯಡಿ 14.2 ಕೆಜಿಯ ಒಂದು ಸಿಲಿಂಡರ್ ಪಡೆಯಲು ಮಾತ್ರ ಅವಕಾಶವಿದೆ. ಆದರೆ, 5 ಕೆಜಿಯ ಎರಡು ಸಿಲಿಂಡರ್ ಪಡೆಯಬಹುದು.
ವೆಬ್ಸೈಟ್ ವಿಳಾಸ - https://www.pmuy.gov.in/ujjwala2.html
Gas cylinder subsidy-ಕೇಂದ್ರ ಸರ್ಕಾರದಿಂದ ದಸರಾ ಗಿಫ್ಟ್ ಸಿಲಿಂಡರ್ ಸಬ್ಸಿಡಿ 200 ರಿಂದ 300 ರೂಪಾಯಿ ಹೆಚ್ಚಳ, ನಿಮ್ಮ ಸಬ್ಸಿಡಿ ಜಮಾ ಹೀಗೆ ಚೆಕ್ ಮಾಡಿ
ದಸರಾ ಹಬ್ಬಕ್ಕೆ ಮೋದಿ ಸರ್ಕಾರ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ದೊಡ್ಡ ಉಡುಗೊರೆ ನೀಡಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಈಗ 200 ರೂ.ಗಳ ಸಬ್ಸಿಡಿಯನ್ನ ಮತ್ತೆ 100 ರೂಪಾಯಿ ಹೆಚ್ಚಿಸಲಾಗಿದ್ದು, ಈಗ 300 ರೂಪಾಯಿ ಪಡೆಯಲಿದ್ದಾರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದರು.
ಕ್ಯಾಬಿನೆಟ್ ಸಭೆಯ ನಂತ್ರ ಮಾತನಾಡಿದ ಸಚಿವರು, ಉಜ್ವಲ ಯೋಜನೆಯಡಿ ಸಹೋದರಿಯರು ಈಗ 300 ರೂ.ಗಳ ಸಬ್ಸಿಡಿ ಪಡೆಯಲಿದ್ದಾರೆ ಎಂದು ಹೇಳಿದರು. ಉಜ್ವಲ ಯೋಜನೆ ಮಹಿಳೆಯರ ಜೀವನಕ್ಕೆ ದೊಡ್ಡ ಕೊಡುಗೆ ನೀಡಿದೆ. ಆದ್ದರಿಂದ, ಈಗ 200 ರೂ.ಗಳ ಬದಲು, 300 ರೂ.ಗಳ ಸಬ್ಸಿಡಿ ಲಭ್ಯವಿರುತ್ತದೆ. ಈ ಹಿಂದೆ, ಉಜ್ವಲ ಯೋಜನೆಯಡಿ, ಜನರು ಸಿಲಿಂಡರ್ನಲ್ಲಿ 200 ರೂ.ಗಳ ಸಬ್ಸಿಡಿಯನ್ನು ಪಡೆಯುತ್ತಿದ್ದರು" ಎಂದರು.
ಅಂದ್ಹಾಗೆ, ರಕ್ಷಾಬಂಧನ ಮತ್ತು ಓಣಂ ಸಂದರ್ಭದಲ್ಲಿ ಕೇಂದ್ರ ಸಚಿವ ಸಂಪುಟವು ಎಲ್ಪಿಜಿಯಲ್ಲಿ 200 ರೂ.ಗಳ ಕಡಿತವನ್ನು ಘೋಷಿಸಿದೆ ಎಂದು ಅನುರಾಗ್ ಠಾಕೂರ್ ಹೇಳಿದರು. ಇಂದು, ಉಜ್ವಲ ಯೋಜನೆಯ ಫಲಾನುಭವಿಯನ್ನು 200 ರೂ.ಗಳಿಂದ 300 ರೂ.ಗಳಿಗೆ ಹೆಚ್ಚಿಸಲಾಗಿದೆ.
Gas subsidy-ನಿಮ್ಮ ಗ್ಯಾಸ್ ಸಬ್ಸಿಡಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್
ನಂತರ ನೀವು ಬಳಸುವ ಗ್ಯಾಸ್ ಕಂಪನಿಯ ಸಿಲಿಂಡರ್ ಮೇಲೆ ಕ್ಲಿಕ್ ಮಾಡಿ
ನಂತರ ನೀವು ಮೊದಲ ಬಾರಿ login ಆಗತ್ತಿದ್ದರೆ, New user ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ,ಜಿಲ್ಲೆ,ಗ್ಯಾಸ್ ಏಜನ್ಸಿ select ಮಾಡಿ,ನಿಮ್ಮ consumer number,ಮೊಬೈಲ್ ನಂಬರ್ ಹಾಗೂ Captch type ಮಾಡಿ,proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಗೆ ಬರುವ OTP ಹಾಕಿ, submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಇ-ಮೇಲ್ ಐಡಿ ಹಾಕಿ,ಹೊಸ Password create ಮಾಡಿ,confirm password type ಮಾಡಿ
ನಂತರ ನಿಮ್ಮ ಇಮೇಲ್ ಐಡಿಗೆ ಬರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ Account activate ಆಗುತ್ತದೆ.click here to login ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ signin ಮೇಲೆ ಕ್ಲಿಕ್ ಮಾಡಿ ಮೊಬೈಲ್ ನಂಬರ್ ಅಥವಾ email Id ಹಾಕಿ, captcha type ಮಾಡಿ,Login ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಇಮೇಲ್ ಐಡಿ ಹಾಕಿ, create ಮಾಡಿದ password ಹಾಕಿ login ಮಾಡಿ
ನಂತರ login ಆದ ನಂತರ ಮುಖಪುಟದ ಎಡಭಾಗದಲ್ಲಿರುವ view cylinder booking history/subsidy transfered ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ಗ್ಯಾಸ್ ಸಬ್ಸಿಡಿ ಮಾಹಿತಿ ದೊರೆಯುತ್ತದೆ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ₹120 ಕೋಟಿವರೆಗೆ ನಷ್ಟ ಆಗಿರಬಹುದು ಎ೦ದು ಅ೦ದಾಜಿಸಲಾಗಿದೆ. ಬೆಳೆ ಹಾನಿಯಾದ ರೈತರ ಬ್ಯಾಂಕ್ ಖಾತೆಗಳಿಗೆ ವಾರದೊಳಗೆ ಪರಿಹಾರ ಹಣ ಜಮೆಯಾಗಲಿದೆ''
ಬೆಳೆಹಾನಿ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/FarmerDeclarationReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ ವಿಕ್ಷಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ FID ಇರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಸಿಗಲಿದೆ
ಬೆಳೆಹಾನಿ ಪರಿಹಾರ ಜಮಾ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service87/
ನಂತರ ನಿಮ್ಮ ಜಿಲ್ಲೆ, ತಾಲೂಕು, ಹೊಬಳಿ, ಗ್ರಾಮ, ವರ್ಷ, ಹಂಗಾಮು ಹಾಗೂ ಬೆಳೆಹಾನಿ ಕಾರಣ select ಮಾಡಿ,Get report ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(bele hani parihara) ಜಮಾ ಮಾಹಿತಿ ದೊರೆಯಲಿದೆ
ನಂತರ view status ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಮಾಹಿತಿ ದೊರೆಯಲಿದೆ
ಈ ಲೇಖನದ ಕೊನೆಯಲ್ಲಿ ಪಟ್ಟಿಯನ್ನು ಲಗತ್ತಿಸಲಾಗಿದೆ ಇದೇ ರೀತಿ ಎಲ್ಲಾ ಗ್ರಾಮ ಪಂಚಾಯತಿ,ರೈತ ಸಂಪರ್ಕ ಕೇಂದ್ರಗಳಲ್ಲಿ FID ಮಾಡಿಸದ ಪಟ್ಟಿಯನ್ನು ಲಗತ್ತಿಸಲಾಗಿದ್ದು,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ FID ಮಾಡಿಸಿಕೊಳ್ಳಿ
ರಾಜ್ಯದ 8.90 ಲಕ್ಷ ಹಾಲು ಉತ್ಪಾದಕರಿಗೆ ₹649.76 ಕೋಟಿ ಪ್ರೋತ್ಸಾಹಧನ ನೇರ ಖಾತೆಗೆ ಜಮೆ
16,615 ರಾಸುಗಳ ಆಕಸ್ಮಿಕ ಸಾವಿಗೆ ಅವುಗಳ ಮಾಲೀಕರಿಗೆ ₹6.98 ಕೋಟಿ ಪರಿಹಾರ ವಿತರಣೆ
16,895 ಕುರಿ / ಮೇಕೆಗಳ ಆಕಸ್ಮಿಕ ಸಾವಿಗೆ ಅವುಗಳ ಮಾಲೀಕರಿಗೆ ₹8.12 ಕೋಟಿ ಪರಿಹಾರ ವಿತರಿಸಲು ಕ್ರಮ
ಜಾನುವಾರುಗಳ ಸಾಂಕ್ರಾಮಿಕ ರೋಗ ಕಾಲು ಬಾಯಿ ಜ್ವರ ಬಾರದಂತೆ ತಡೆಯಲು 99.07 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಗೂ ಚರ್ಮಗಂಟು ರೋಗ ಬಾರದಂತೆ ತಡೆಯಲು 72.52 ಲಕ್ಷ ದನಗಳಿಗೆ ಲಸಿಕೆ
₹10 ಕೋಟಿ ವೆಚ್ಚದಲ್ಲಿ ರಾಜ್ಯದ ಆಯ್ದ 20 ತಾಲೂಕುಗಳ ಪಶು ಆಸ್ಪತ್ರೆಗಳು ಮೇಲ್ದರ್ಜೆಗೆ
ಬಾಡಿಗೆ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 200 ಪಶುವೈದ್ಯ ಸಂಸ್ಥೆಗಳಿಗೆ ₹100 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ
Milk incentive status-ಇಲ್ಲಿಯವರೆಗೂ ಜಮಾ ಆಗಿರುವ ಹಾಲಿನ ಪ್ರೋತ್ಸಾಹಧನ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ "ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಪ್ರೋತ್ಸಾಹಧನ ಮಾಹಿತಿ ಸಿಗಲಿದೆ.
ಹೀಗೂ ಚೆಕ್ ಮಾಡಬಹುದು
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/Klda/MilkIncentive?ServiceId=5399&Type=TABLE&DepartmentId=3119
ನಂತರ ನಿಮ್ಮ ಜಿಲ್ಲೆ,ತಾಲೂಕು,Milk Union,ಗ್ರಾಮ, select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ನಿಮ್ಮ ಗ್ರಾಮದಲ್ಲಿ ಯಾರಿಗೆಲ್ಲಾ ಎಷ್ಟು ಹಾಲಿನ ಪ್ರೋತ್ಸಾಹಧನ(Milk incentive) ಬಂದಿದೆ ಎಂದು ತಿಳಿಯಲಿದೆ
ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹಾವೇರಿ
ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ 18 ರಿಂದ 45 ವಯಸ್ಸಿನ ಯುವಕ ಮತ್ತು ಯುವತಿಯರಿಗೆ ಹತ್ತು ದಿನಗಳ ಕಾಲ ಕೋಳಿ ಸಾಕಾಣಿಕೆ ತರಬೇತಿಯನ್ನು ದಿನಾಂಕ 4/1/2025 ರಿಂದ 13/1/2025 ವರೆಗೆ ಹಮ್ಮಿಕೊಳ್ಳಲಾಗಿದೆ.ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ
ಆಸಕ್ತರು ಕೂಡಲೇ ಕೆಳಗಡೆ ನಮೂದಿಸಿದ ಮೊಬೈಲ್ ನಂಬರ್ ಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಿ
8660219375
ತರಭೇತಿ ಸ್ಥಳ
ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಡಿ.ಸಿ ಆಫೀಸ್ ಹಿಂಭಾಗ ದೇವಗಿರಿ ಹಾವೇರಿಯಲ್ಲಿ
ಕೋಳಿ ಸಾಕಾಣಿಕೆ
ತರಬೇತಿ ದಿನಾಂಕ
4-1-2025 ರಿಂದ 13-1-2025
ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.
ಆಸಕ್ತರು ಕೆಳಗಿನ ನಂಬರ್ಗೆ ಕರೆ ಮಾಡಿ
8660219375
ತರಬೇತಿಯಲ್ಲಿ ಕಲಿಸುವ ವಿಷಯಗಳು
1)ಕೋಳಿ ತಳಿಗಳು(Breeds)
2)ವಿವಿಧ ಔಷಧ ಉಪಚಾರಗಳು (Vaccination)
3)ಸೂಕ್ತ ಆಹಾರ ಕ್ರಮಗಳು (Animal feeding method)
4)ಲೋನ್ ಗಳ ಮಾಹಿತಿ,ಸಬ್ಸಿಡಿಗಳ ಮಾಹಿತಿ, ಪ್ರಾಜೆಕ್ಟ್ ರಿಪೋರ್ಟ್ ಮಾಹಿತಿ (Loan,subsidy schemes,detail project report)
ಇನ್ನು ಇತರೆ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು
ಆಸಕ್ತರು ಕೂಡಲೇ ಕೆಳಗಡೆ ನಮೂದಿಸಿದ ಮೊಬೈಲ್ ನಂಬರ್ ಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಿ
8660219375
ತರಬೇತಿಯು ಕಡ್ಡಾಯವಾಗಿ ಹಾವೇರಿ ಜಿಲ್ಲೆಯವರಿಗೆ ಮಾತ್ರ
(ಸೂಚನೆ-ಇದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಲಿಡ್ ಬ್ಯಾಂಕ್ ವತಿಯಿಂದ ತರಭೇತಿಗಳು ನಡೆಯುತ್ತವೆ,ಹೆಚ್ಚಿನ ಮಾಹಿತಿಗಾಗಿ ಲಿಡ್ ಬ್ಯಾಂಕ್ ನ್ನು ಸಂಪರ್ಕಿಸಿ)
]]>
ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ಡಿ.2ರಂದು ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
]]>
ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ.
ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕೋಳಿ ಮರಿಗಳನ್ನು ವಿತರಿಸಲಾಗುವುದು. ಜೇನು, ಕುರಿ, ಹಸು ಸಾಕಾಣಿಕೆಗೆ ಪ್ರೋತ್ಸಾಹ ನೀಡುತ್ತಿರುವ ಮಾದರಿಯಲ್ಲಿ ನಾಟಿ ಕೋಳಿ ಸಾಕಾಣಿಕೆ ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬಡ ಕುಟುಂಬಗಳ ಮಹಿಳೆಯರಿಗೆ ತಲಾ 20 ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುವುದು. ಪ್ರತಿ ತಾಲೂಕಿಗೆ 106 ಫಲಾನುಭವಿಗಳಂತೆ ಗುರಿ ನಿಗದಿಪಡಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿನ ರೈತ ಮಹಿಳೆಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘದ ಮಹಿಳಾ ಸದಸ್ಯರಿಗೆ, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಯೋಜನೆಯಡಿ ಆದ್ಯತೆ ನೀಡಲಾಗುವುದು.
ನಾಟಿ ಕೋಳಿಗಳಿಗೆ ಪ್ರಸ್ತುತ ಬೇಡಿಕೆ ಹೆಚ್ಚಾಗಿದೆ. ಇವುಗಳ ಸಾಕಾಣೆಗೆ ಹೆಚ್ಚು ಖರ್ಚಾಗುವುದಿಲ್ಲ. ಮನೆ ಮುಂದೆ ಹಿತ್ತಲುಗಳಲ್ಲಿ ಕೋಳಿ ಸಾಕಬಹುದು, ವೆಚ್ಚಕ್ಕಿಂತ ಅಧಿಕ ಲಾಭ ಸಿಗುತ್ತದೆ. ಇವುಗಳ ಸಾಕಾಣಿಕೆಗೆ ಹೆಚ್ಚಿನ ಶ್ರಮ ಅಗತ್ಯವಿರುವುದಿಲ್ಲ. ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಆರ್ಥಿಕ ಸಬಲತೆ ಸಾಧಿಸಲು ತಲಾ 20 ಕೋಳಿ ಮರಿ ವಿತರಿಸಲಾಗುವುದು ಎಂದು ಹೇಳಲಾಗಿದೆ.
1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ(Vetarnary department)ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.
ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
Vetarnary department schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ
ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy - https://krushirushi.in/Cattle-shed-subsidy-scheme-1630
ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ₹120 ಕೋಟಿವರೆಗೆ ನಷ್ಟ ಆಗಿರಬಹುದು ಎ೦ದು ಅ೦ದಾಜಿಸಲಾಗಿದೆ. ಬೆಳೆ ಹಾನಿಯಾದ ರೈತರ ಬ್ಯಾಂಕ್ ಖಾತೆಗಳಿಗೆ ವಾರದೊಳಗೆ ಪರಿಹಾರ ಹಣ ಜಮೆಯಾಗಲಿದೆ''
ಬೆಳೆಹಾನಿ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/FarmerDeclarationReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ ವಿಕ್ಷಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ FID ಇರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಸಿಗಲಿದೆ
ಬೆಳೆಹಾನಿ ಪರಿಹಾರ ಜಮಾ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service87/
ನಂತರ ನಿಮ್ಮ ಜಿಲ್ಲೆ, ತಾಲೂಕು, ಹೊಬಳಿ, ಗ್ರಾಮ, ವರ್ಷ, ಹಂಗಾಮು ಹಾಗೂ ಬೆಳೆಹಾನಿ ಕಾರಣ select ಮಾಡಿ,Get report ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(bele hani parihara) ಜಮಾ ಮಾಹಿತಿ ದೊರೆಯಲಿದೆ
ನಂತರ view status ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಮಾಹಿತಿ ದೊರೆಯಲಿದೆ
ಈ ಲೇಖನದ ಕೊನೆಯಲ್ಲಿ ಪಟ್ಟಿಯನ್ನು ಲಗತ್ತಿಸಲಾಗಿದೆ ಇದೇ ರೀತಿ ಎಲ್ಲಾ ಗ್ರಾಮ ಪಂಚಾಯತಿ,ರೈತ ಸಂಪರ್ಕ ಕೇಂದ್ರಗಳಲ್ಲಿ FID ಮಾಡಿಸದ ಪಟ್ಟಿಯನ್ನು ಲಗತ್ತಿಸಲಾಗಿದ್ದು,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ FID ಮಾಡಿಸಿಕೊಳ್ಳಿ
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಡಿಸೆಂಬರ್ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಹಿಂಗಾರು ಮಳೆ ಅವಧಿಯಲ್ಲಿ ರಾಜ್ಯಾದ್ಯಂತ 1,58,087 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಮುಂದಿನ ಒಂದು ವಾರದಲ್ಲಿ ಎಲ್ಲಾ ರೈತರ ಬ್ಯಾಂಕ್ ಖಾತೆಗಳಿಗೂ ಪರಿಹಾರ ಹಣ ಜಮೆಯಾಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಶುಕ್ರವಾರ ವಿಕಾಸ ಸೌಧದಿಂದ ವಿಡಿಯೋ ಕಾನ್ನರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, " ಹಿಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬೆಳೆ ಹಾನಿ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ಜಂಟಿ ಸಮೀಕ್ಷೆ ನಡೆಸಲಾಗಿದ್ದು, ಡೇಟಾ ಎಂಟ್ರಿ ಕೆಲಸಗಳೂ ಮುಕ್ತಾಯದ ಹಂತದಲ್ಲಿದೆ.ರೂ. 120 ಕೋಟಿ ವರೆಗೆ ನಷ್ಟ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಮುಂದಿನ ಒಂದು ವಾರದಲ್ಲಿ ಎಲ್ಲಾ ರೈತರ ಖಾತೆಗಳಿಗೂ ಹಣ ಜಮೆ ಆಗಲಿದೆ'' ಎಂದು ತಿಳಿಸಿದರು.
ಮುಂದುವರೆದು, "ಜಿಲ್ಲಾಧಿಕಾರಿಗಳ ಖಾತೆಯಲ್ಲೇ ರೂ. 642 ಕೋಟಿ ಹಣ ಲಭ್ಯವಿದ್ದು, ಈ ಹಣದಲ್ಲೇ ಪರಿಹಾರ ಶೀಘ್ರ ವಿತರಿಸಲಾಗುವುದು. ಮುಂಗಾರು ಹಂಗಾಮಿನಲ್ಲಿ ಸುಮಾರು 77,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿತ್ತು. ಕೆಲವಡೆ ಮನೆ ಕುಸಿದಿದ್ದವು, ಕೆಲವೆಡೆ ಪ್ರಾಣ ಹಾನಿಯಂತಹ ಘಟನೆಗಳೂ ಸಂಭವಿಸಿದ್ದವು. ಇದಕ್ಕೆ ಸಂಬಂಧಿಸಿದಂತೆ ಒಟ್ಟಾರೆ ರೂ.162 ಕೋಟಿ ಹಣವನ್ನು ಪರಿಹಾರವಾಗಿ ರೈತರ ಖಾತೆಗಳಿಗೆ ಈಗಾಗಲೇ ಜಮೆ ಮಾಡಲಾಗಿದೆ" ಎಂದರು.
ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಬೆಳೆ ಸಮೀಕ್ಷೆ(Bele samikshe) ಮೂಲಕ ಸಂಗ್ರಹಿಸಲಾದ ಬೆಳೆ
ಮಾಹಿತಿ ಕುರಿತು ಆಕ್ಷೇಪಣೆ ಸಲ್ಲಿಸಲು ನ. 20ರವರೆಗೆ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ ದರ್ಶಕ ಮೊಬೈಲ್ ಆ್ಯಪ್(Bele darshaka App)ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ(Crop survey portal) ಮೂಲಕ ಆಕ್ಷೇಪಣೆ ಸಲ್ಲಿಸಬಹುದು.
ಬೆಳೆ ಸಮೀಕ್ಷೆ ದತ್ತಾಂಶವನ್ನು ಬೆಳೆವಿಮೆ(Bele vime), ಬೆಂಬಲ ಬೆಲೆ ಯೋಜನೆಯಡಿ(MSP) ಬೆಳೆ ಮಾರಾಟ ಮಾಡಲು, ಬೆಳೆ ನಷ್ಟ ಪರಿಹಾರ(bele hani) ಹಾಗೂ ಇತರ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಳಕೆ ಮಾಡಲಾಗುವುದು. ಆದ್ದರಿಂದ ರೈತರು ತಾವು ಬೆಳೆದ ಬೆಳೆ ಹಾಗೂ ಬೆಳೆ ಸಮೀಕ್ಷೆಯಲ್ಲಿ (crop survey)ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಖಾತ್ರಿಪಡಿಸಿಕೊಳ್ಳಬೇಕು. ಒಂದು ವೇಳೆ ಭಿನ್ನವಾಗಿದ್ದಲ್ಲಿ, ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ನಂತರದ ಆಕ್ಷೇಪಣೆ ಸ್ವೀಕರಿಸಲಾಗುವುದಿಲ್ಲ.
ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಗೂಗಲ್ ಪ್ಲೇ ಸ್ಟೋರ್ ಮೂಲಕ ಅಥವಾ https://play.google.com/
ನಂತರ ರೈತ select ಮಾಡಿ
ನಂತರ ವರ್ಷ,ಋುತು, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ.
ನಂತರ ಸರ್ವೇ ನಂಬರ್ ಹಾಕಿ,ಹಿಸ್ಸಾಆಯ್ಕೆ ಮಾಡಿ,ಸಮೀಕ್ಷೆಯ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ನಂತರ ಬೆಳೆವಿವರ ವೀಕ್ಷಿಸಿ ಮೇಲೆ ಕ್ಲಿಕ್ ಮಾಡಿ
ನಂತರ photo ಮೇಲೆ ಕ್ಲಿಕ್ ಮಾಡಿದರೆ ನೀವು ಬೆಳೆದ ಬೆಳೆ ಹಾಗೂ ಫೋಟೊ ಅಪ್ಲೊಡ್ ಸರಿಯಾಗಿರುವುದನ್ನು ಪರಿಕ್ಷೀಸಿ.
ಬೆಳೆ ಸಮಿಕ್ಷೆ ಸರಿಯಾಗಿರದಿದ್ದರೆ,ಮತ್ತೆ ಬೆಳೆ ಸಮಿಕ್ಷೆ ಮಾಡಿ ಸರಿಪಡಿಸಲು ಅವಕಾಶವಿರುತ್ತದೆ.
ಏನಿದು ಬೆಳೆ ದರ್ಶಕ ಆ್ಯಪ್?
ಈ ಅಪ್ಲಿಕೇಶನ್ ಮಾಡಿದ ಉದ್ದೇಶ ಬೆಳೆ ಸಮೀಕ್ಷೆಯನ್ನು (Crop survey)ನೋಡಲು.. ಇದರಲ್ಲಿ ನೀವು ಅಪ್ಲೋಡ್ ಮಾಡಿದ ಚಿತ್ರಗಳನ್ನು ಮತ್ತು ಸಮೀಕ್ಷೆ ಮಾಡಿದ ಸರ್ವೇಯರ್ ವಿವರಗಳನ್ನು ನೋಡಬಹುದು.
ತಮ್ಮ ಮೊಬೈಲ್ ಮೂಲಕ ಬೆಳೆಗಳ ಸಮೀಕ್ಷೆ(Bele samikshe) ಮಾಡಬಹುದು. ಅಥವಾ ನೆರೆಯ ಖಾಸಗಿ ವ್ಯಕ್ತಿಗಳ (Private resident) ಮೊಬೈಲ್ ಮೂಲಕ ಜಮೀನುಗಳ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ನಿಮ್ಮ ಜಮೀನಿನ ಸರ್ವೆ ನಂಬರ್(Survey number) ಮತ್ತು ಜಮೀನಿನ ಫೊಟೋ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಮೊಬೈಲ್ ನಲ್ಲಿ Bele darshak app ಮೂಲಕ ಕ್ಷಣಾರ್ಧದಲ್ಲಿ ನೋಡಬಹುದು. ಒಂದು ವೇಳೆ ತಪ್ಪಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು.
ಬೆಳೆ ದರ್ಶಕ್ ಆ್ಯಪ್(bele darshaka app) ಇನ್ಸ್ ಸ್ಟಾಲ್ ಮಾಡಿಕೊಂಡ ನಂತರ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಇನ್ನಿತರ ಮಾಹಿತಿ ನಮೂದಿಸಬೇಕು. ಬೆಳೆ ದರ್ಶಕ್ ಆ್ಯಪ್(Bele darshaka application) ಮೂಲಕ ಜಮೀನಿನಲ್ಲಿ ಬೆಳೆ ಸಮೀಕ್ಷೆ (Bele samikshe)ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ (Crop survey)ಸಮಯದಲ್ಲಿ ತೆಗೆಯಲಾದ ಜಿಪಿಎಸ್ ಆಧಾರಿತ (GPS Photo)ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ಅಲ್ಲದೆ ರೈತರ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ, (Mobile number)ರೈತರು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ನೋಡಬಹುದು.
ಒಂದು ವೇಳೆ ಮಾಹಿತಿ ತಪ್ಪಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು.ಮೇಲ್ವಿಚಾರಕರು ಸೂಕ್ತ ಬೆಳೆಗಳನ್ನು ದಾಖಲಿಸಿ ರೈತರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುತ್ತಾರೆ. ಇನ್ನೇಕೆ ತಡ ಒಮ್ಮೆ ನಿಮ್ಮ ಬೆಳೆ ಸಮೀಕ್ಷೆಯಲ್ಲಿ ಎಲ್ಲಾ ಸರ್ವೆ ನಂಬರ್, ಮಾಹಿತಿ ಹಾಗೂ ಫೋಟೋ ಸರಿಯಾಗಿ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಡಿ
]]>
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ - https://krushirushi.in/Tahasildar-varification-status-approved-1634
]]>
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ(Vetarnary department)ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.
ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
Vetarnary department schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ
ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy - https://krushirushi.in/Cattle-shed-subsidy-scheme-1630
ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>
ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ 17.61 ಲಕ್ಷ ರೈತ ಫಲಾನುಭವಿಗಳಿಗೆ 2021.17 ಕೋಟಿ ರೂ. ಬೆಳೆ ವಿಮೆ(Bele vime) ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 22.97 ಲಕ್ಷ ರೈತ ಪ್ರಸ್ತಾವನೆಗಳು 17.60 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೋಂದಣಿಯಾಗಿದೆ. 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಈವರೆಗೆ 25148 ರೈತ ಪ್ರಸ್ತಾವನೆಗಳು 31690.28 ಹೆಕ್ಟೇರ್ ಪ್ರದೇಶಕ್ಕೆ ನೋಂದಣಿಯಾಗಿದ್ದು, ಕಾರ್ಯ ಪ್ರಗತಿಯಲ್ಲಿದೆ ಎಂದರು.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಡಿಸೆಂಬರ್ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಕೃಷಿ ಸಾಲ ಮನ್ನಾ ಯೋಜನೆಗೆ ಅನುಮೋದನೆ ನೀಡಿರುವ ತೆಲಂಗಾಣ ಸಚಿವ ಸಂಪುಟ, 'ರೈತು ಭರೋಸಾ' ಯೋಜನೆ ಅನುಷ್ಠಾನದಲ್ಲಿ ಪಾರದರ್ಶಕತೆ ಖಾತ್ರಿಪಡಿಸುವ ಸಲುವಾಗಿ ಸಂಪುಟ ಉಪಸಮಿತಿ ನೇಮಕ ಮಾಡಲು ಶುಕ್ರವಾರ ನಿರ್ಧರಿಸಿದೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ, 'ವಿಧಾನಸಭೆ ಚುನಾವಣೆಗೂ ಮುನ್ನ ವರಂಗಲ್ನಲ್ಲಿ ಪ್ರಕಟಿಸಿದ 'ರೈತ ಘೋಷಣೆ'ಯಲ್ಲಿ ಹೇಳಿರುವಂತೆ ಕೃಷಿ ಸಾಲ ಮನ್ನಾ ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ' ಎಂದರು.
'2018 ರ ಡಿಸೆಂಬರ್ 12ರಿಂದ 2023 ರ ಡಿಸೆಂಬರ್ 09 ರವರೆಗಿನ ಅವಧಿಯಲ್ಲಿ ರೈತರು ತೆಗೆದುಕೊಂಡಿರುವ ಕೃಷಿ ಸಾಲವನ್ನು ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ₹31 ಸಾವಿರ ಕೋಟಿ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ' ಎಂದರು.
ಹಾಗಾದರೆ ಕರ್ನಾಟಕದಲ್ಲಿ ಬೆಳೆಸಾಲ ಮನ್ನಾ ಸ್ಟೇಟಸ್ ಹೇಗಿದೆ?
ನೆರೆಯ ತೆಲಂಗಾಣದಲ್ಲಿ ₹2 ಲಕ್ಷದವರೆಗೆ
ರೈತರ ಸಾಲ ಮನ್ನಾ ಮಾಡಲು ಅಲ್ಲಿನ ಸರ್ಕಾರ ನಿರ್ಧಾರ
ಮಾಡಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರೈತರ ಸಾಲ ಮನ್ನಾ
ಮಾಡಿ ರೈತರನ್ನು ಋಣಮುಕ್ತರನ್ನಾಗಿಸಿ' ಎಂದು ವಿಧಾನಸಭೆ
ವಿರೋಧಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದ್ದಾರೆ
Belesala manna status 2024-ಬೆಳೆಸಾಲ ಮನ್ನಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ
ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ/farmer" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
38.58 ಲಕ್ಷ ರೈತರಿಗೆ ₹3,535 ಕೋಟಿ ಬೆಳೆ ಹಾನಿ ಪರಿಹಾರ ವಿತರಿಸಲಾಗಿದೆ ಹಾಗೂ ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಡಿ ಹೆಚ್ಚುವರಿ ಪರಿಹಾರ ಮತ್ತು ದೇವರಾಜ ಅರಸು ವಸತಿ ಯೋಜನೆಯಡಿ ಹೊಸ ಮನೆಯನ್ನು ವಿತರಿಸಲು ಕ್ರಮ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 38.58 ಲಕ್ಷ ರೈತರಿಗೆ 3535 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಅರ್ಹ ರೈತರಿಗೆ ಬರ ಪರಿಹಾರ ತಲುಪಿಸಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಕುರಿತ ಪಟ್ಟಿಯನ್ನು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗಿದೆ. ರೈತರು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಪಟ್ಟಿ ಪರಿಶೀಲಿಸಬಹುದು. ಹೆಸರು ಬಿಟ್ಟು ಹೋಗಿದ್ದರೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕಂದಾಯ ಇಲಾಖೆಯ ಸ್ಥಳೀಯ ಕಚೇರಿಗೆ ಭೇಟಿ ನೀಡಿ ಸೇರ್ಪಡೆ ಮಾಡಿಸಿಕೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
2024-25ನೇ ಸಾಲಿನಲ್ಲಿ ಪ್ರಕೃತಿ
ವಿಕೋಪದಿಂದ ಅತೀವೃಷ್ಟಿ ನಿರಂತರ ಮಳೆ ಮುಂತಾದ ಕಾರಣಗಳಿಂದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿಗೆ ಪರಿಹಾರ ಪಾವತಿಸುವ ಕುರಿತಂತೆ ಫಲಾನುಭವಿಗಳ ಪಟ್ಟಿಯನ್ನು ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿ ಕಾರ್ಯಾಲಯ, ತಹಸೀಲ್ದಾರ್ ಕಾರ್ಯಾಲಯ, ಗ್ರಾಮ ಪಂಚಾಯಿತಿ ಮತ್ತು ರೈತ ಸಂಪರ್ಕ ಕೇಂದ್ರಗಳ ಕಚೇರಿಯಲ್ಲಿ ಪ್ರಕಟಿಸಲಾಗಿರುತ್ತದೆ. ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಆಯಾ ತಾಲೂಕಿನ ತಹಸೀಲ್ದಾರ್ ಕಚೇರಿಗಳಲ್ಲಿ 7 ದಿನಗಳೊಳಗಾಗಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳೆಹಾನಿ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/FarmerDeclarationReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ ವಿಕ್ಷಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ FID ಇರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಸಿಗಲಿದೆ
ಬೆಳೆಹಾನಿ ಪರಿಹಾರ ಜಮಾ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service87/
ನಂತರ ನಿಮ್ಮ ಜಿಲ್ಲೆ, ತಾಲೂಕು, ಹೊಬಳಿ, ಗ್ರಾಮ, ವರ್ಷ, ಹಂಗಾಮು ಹಾಗೂ ಬೆಳೆಹಾನಿ ಕಾರಣ select ಮಾಡಿ,Get report ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(bele hani parihara) ಜಮಾ ಮಾಹಿತಿ ದೊರೆಯಲಿದೆ
ನಂತರ view status ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಮಾಹಿತಿ ದೊರೆಯಲಿದೆ
ಈ ಲೇಖನದ ಕೊನೆಯಲ್ಲಿ ಪಟ್ಟಿಯನ್ನು ಲಗತ್ತಿಸಲಾಗಿದೆ ಇದೇ ರೀತಿ ಎಲ್ಲಾ ಗ್ರಾಮ ಪಂಚಾಯತಿ,ರೈತ ಸಂಪರ್ಕ ಕೇಂದ್ರಗಳಲ್ಲಿ FID ಮಾಡಿಸದ ಪಟ್ಟಿಯನ್ನು ಲಗತ್ತಿಸಲಾಗಿದ್ದು,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ FID ಮಾಡಿಸಿಕೊಳ್ಳಿ
]]>
ನಿಮಗೆ ಗೊತ್ತಿಲ್ಲದೇ ಹಾಗೆ ನಿಮ್ಮ ಪಹಣಿಯಲ್ಲಿ(RTC) ಅವರ ಹೆಸರು ಹಾಕಿದ್ದಾರೆ ಎಂಬುದನ್ನು ರೈತರು ಒಮ್ಮೆ ಪರಿಶೀಲಿಸಿ. ಈ ಕೆಲಸವನ್ನು ಪ್ರತಿಯೊಂದು ರೈತರು ಆದಷ್ಟು ಬೇಗ ಮಾಡಬೇಕು. ಈ ಮಾಹಿತಿ ನಿಮ್ಮ ಕಾನೂನು ಹೋರಾಟಕ್ಕೆ ನಿರ್ಣಾಯಕ ಹಾಗೂ ಸಾಕ್ಷ್ಯ ಸಂಗ್ರಹಿಸಲು ಅಗತ್ಯವಾದ ಪ್ರಕ್ರಿಯೆ ಆಗಿರುತ್ತದೆ. ಆದ್ದರಿಂದ ಇಂದೇ ನಿಮ್ಮ ಪಹಣಿಯ(Uthara) ಕಾಪಿ ಪಡೆದು ಪರಿಶೀಲನೆ ಮಾಡಿ, ಒಂದು ವೇಳೆ ಯಾರಾದರು ಎಂದು ನಮೂದಿಸಲಾಗಿದ್ದಲ್ಲಿ ಕೂಡಲೇ ಜಮೀನಿನ ದಾಖಲೆ(Land records) ಹಾಗೂ ಪಹಣಿಯೊಂದಿಗೆ ತಹಶಿಲ್ದಾರ್ ಅಥವಾ ಜಿಲ್ಲಾದಿಕಾರಿಗಳಿಗೆ ದೂರು ಸಲ್ಲಿಸಿ
ನಿಮ್ಮ ಪಹಣೆಯಲ್ಲಿ(pahani) ಯಾರ ಹೆಸರಿದೆ ಎಂದು ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಲಿಂಕ್ ಮೋಲೆ ಕ್ಲಿಕ್ ಮಾಡಿ
https://landrecords.karnataka.gov.in/Service2/
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಪಹಣೆಯಲ್ಲಿ ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
Bele sala-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ-crop loan status - https://krushirushi.in/Bele-sala-crop-loan-status-1638
]]>2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/PariharaPayment/
ನಂತರ "ಆಧಾರ್ ಸಂಖ್ಯೆ/Aadhar number" ಮೇಲೆ ಕ್ಲಿಕ್ ಮಾಡಿ
ನಂತರ calamity type "Flood" ಎಂದು ಋುತು "2024-25" ಎಂದು select ಮಾಡಿ
ನಂತರ ನಿಮ್ಮ ಆಧಾರ್ ನಂಬರ್/Aadhar number ಹಾಕಿ,captch code ಹಾಕಿ,ವಿವರಗಳನ್ನು ಪಡೆಯಲು/Fetch details ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪರಿಹಾರ ಹಣ ಜಮಾ ಸ್ಟೇಟಸ್ ತಿಳಿಯಲಿದೆ
ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ (FRUITS ID) ಪ್ರೊಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ(Parihara Portal) ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ(Direct benefit transfer) ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುದು.
https://everydaytrends.in/kmf-to-procure-maize-at-2400-per-quintal/
ರಾಜ್ಯದ ರೈತರಿಗೆ ಕೆಎಂಎಫ್ ನಿಂದ ಗುಡ್ ನ್ಯೂಸ್: ಕ್ವಿಂಟಾಲ್ ಗೆ 2400 ರೂ. ದರದಲ್ಲಿ ಮೆಕ್ಕೆಜೋಳ ಖರೀದಿ
ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.
ಬೆಳೆ ಹಾನಿ ಪರಿಹಾರ(Bele hani parihara) ಪಡೆದುಕೊಳ್ಳಲು (FRUITS ID) ಪ್ರೊಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೊಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ (FRUITS ID) ಪ್ರೊಟ್ಸ್ ಐಡಿ ಸೃಜಿಸಿಕೊಳ್ಳಬಹುದು. (FRUITS ID) ಪ್ರೊಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.
ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್/Aadhaar number ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ನೀಡುತ್ತಿರುವ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗದಿದ್ದರೆ ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯಲ್ಲಿ ಇಕೆವೈಸಿ(Ration card Ekyc) ಕಡ್ಡಾಯವಾಗಿ ಪೂರ್ಣಗೊಳಿಸಿಕೊಳ್ಳಬೇಕು ಎಂದು ಆಹಾರ ಇಲಾಖೆ ಸೂಚನೆ ನೀಡಿದೆ.
ಈವರೆಗೂ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ರಾಜ್ಯದ ಯಾವುದೇ ಪಡಿತರ ಚೀಟಿದಾರರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯಲ್ಲಿ ಇಕೆವೈಸಿ ಕಡ್ಡಾಯವಾಗಿ ಪೂರ್ಣಗೊಳಿಸಿಕೊಳ್ಳಬೇಕು.
ಪಡಿತರ ಚೀಟಿದಾರರ ಖಾತೆಗೆ ನೇರವಾಗಿ ಹಣ ವರ್ಗಾವಣೆಗೆ ಸಂಬಂಧಿಸಿದಂತೆ, ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಕಾರ್ಡ್ನೊಂದಿಗೆ ಬ್ಯಾಂಕಿನಲ್ಲಿ ಇಕೆವೈಸಿ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು, ಹಾಗೆಯೇ ಖಾತೆ ಹೊಂದಿರದ ಕಾರ್ಡುದಾರರು ರಾಷ್ಟ್ರೀಕೃತ ಬ್ಯಾಕ್ನಲ್ಲಿ ಹೊಸ ಖಾತೆ ಅಥವಾ ಅಂಚೆ ಇಲಾಖೆಯಲ್ಲಿ ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್ ಖಾತೆಯನ್ನು ಮಾಡಿಸಿಕೊಳ್ಳಬೇಕು.
Ration card ekyc status-ನಿಮ್ಮ ರೇಷನ್ ಕಾರ್ಡ್ ಇಕೆವೈಸಿ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ e-status ಮೇಲೆ ಕ್ಲಿಕ್ ಮಾಡಿ
ನಂತರ DBT Status ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ select ಮಾಡಿ
ನಂತರ "Status of Ration Card/ಪಡಿತರ ಚೀಟಿ ವಿವರ"ಮೇಲೆ ಕ್ಲಿಕ್ ಮಾಡಿ
ನಂತರ without OTP Select ಮಾಡಿ
ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ರೇಷನ್ ಕಾರ್ಡ್ ನ ಸಂಪೂರ್ಣ ವಿವರ,ನಿಮ್ಮ ಕುಟುಂಬದಲ್ಲಿ ಎಷ್ಟು ಜನರ ಇಕೆವೈಸಿ ಆಗಿದೆ,ಎಷ್ಟು ಜನರ ಇಕೆವೈಸಿ ಬಾಕಿ ಇದೆ ಎಂಬ ವಿವರ ಹಾಗೂ ಇಲ್ಲಿಯವರೆಗೂ ಎಷ್ಟು ಅಕ್ಕಿ ಪಡೆದಿದ್ದಿರಿ ಎಂಬ ಮಾಹಿತಿ ಸಿಗಲಿದೆ
ಇಕೆವೈಸಿ ಆಗಿರದಿದ್ದರೆ,ಹತ್ತಿರದ ಪಡಿತರ ವಿತರಿಸುವ ಕೇಂದ್ರಕ್ಕೆ ಹೋಗಿ ಬಯೊಮೆಟ್ರಿಕ್ ನಲ್ಲಿ ನಿಮ್ಮ ಹೆಬ್ಬೆಟ್ಟು ಒತ್ತಿ ,ಇಕೆವೈಸಿ ಮಾಡಿಸಿ
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ನಿಯಮಿತದಿಂದ ಉಚಿತ ಹೊಲಿಗೆ ಯಂತ್ರವನ್ನು(Free sewing machine/uchitha holige yantra) ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ವರ್ಷ ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿ ಫಲಾನುಭವಿಗಳಿಗೆ ವಿವಿಧ ವಲಯಗಳಲ್ಲಿ ಸ್ವ-ಉದ್ಯೋಗ ಮಾಡಲು ಅರ್ಥಿಕವಾಗಿ ನೆರವು ನೀಡಲು ರಾಜ್ಯದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ವಿವಿಧ ನಿಗಮಗಳಿಂದ ಉಚಿತವಾಗಿ ಹೊಲಿಗೆ ಯಂತ್ರವನ್ನು (Free sewing machine scheme) ನೀಡಲು ಅರ್ಜಿ ಆಹ್ವಾನಿಸಲಾಗುತ್ತಿದ್ದು ಇದರಂತೆ ಈ ವರ್ಷವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.
1) ಹಿಂದುಳಿದ ವರ್ಗಗಳ ಬಡ ಕುಟುಂಬದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಡಿಯಲ್ಲಿ ಪ್ರಯೋಜನವನ್ನು ಪಡೆಯಲು ಅರ್ಜಿ ಸಲ್ಲಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದವರಾಗಿರಬೇಕು.
2) ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪುದೇಶದವರಿಗೆ ರೂ.1,20,000/-ಗಳ ಒಳಗಿರಬೇಕು,
3) ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು(Free sewing machine documents)
ಅರ್ಜಿ ಸಲ್ಲಿಸುವುದು ಹೇಗೆ? How to apply for free sewing machine application online)
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://sevasindhu.karnataka.gov.in/
ಅಥವಾ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಮೂಲಕ ಅರ್ಜಿ ಸಲ್ಲಿಸಿ
ಇದನ್ನೂ ಓದಿ
Bele vime-17.60 ಲಕ್ಷ ರೈತರಿಗೆ 2021 ಕೋಟಿ ಪರಿಹಾರ-ಕೃಷಿ ಸಚಿವ ಚಲುವರಾಯಸ್ವಾಮಿ, ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್-crop insurance - https://krushirushi.in/Bele-vime-crop-insurance-1689
]]>
ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ 17.61 ಲಕ್ಷ ರೈತ ಫಲಾನುಭವಿಗಳಿಗೆ 2021.17 ಕೋಟಿ ರೂ. ಬೆಳೆ ವಿಮೆ(Bele vime) ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 22.97 ಲಕ್ಷ ರೈತ ಪ್ರಸ್ತಾವನೆಗಳು 17.60 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೋಂದಣಿಯಾಗಿದೆ. 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಈವರೆಗೆ 25148 ರೈತ ಪ್ರಸ್ತಾವನೆಗಳು 31690.28 ಹೆಕ್ಟೇರ್ ಪ್ರದೇಶಕ್ಕೆ ನೋಂದಣಿಯಾಗಿದ್ದು, ಕಾರ್ಯ ಪ್ರಗತಿಯಲ್ಲಿದೆ ಎಂದರು.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಕಷ್ಟದಲ್ಲಿರುವ ರೈತರಿಗೆ ಆರ್ಥಿಕ ನೆರವು ಒದಗಿಸಲು ಕೇಂದ್ರ ಸರ್ಕಾರ ಮಹತ್ವದ ಯೋಜನೆಗಳನ್ನು ಪರಿಚಯ ಮಾಡಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ಪೈಕಿ ರೈತರಿಗೆ ವಿಶೇಷ ಕಿಸಾನ್ ಕ್ರೆಡಿಟ್ ಕಾರ್ಡ್ ಸ್ಕೀಮ್ ಕೂಡ ಒಂದು.ಕಿಸಾನ್ ಕ್ರೆಡಿಟ್ ಕಾರ್ಡ್ (kisan credit card) ನೀಡುವ ಮುಖ್ಯ ಉದ್ದೇಶ ದೇಶದ ಕೋಟ್ಯಾಂತರ ರೈತರಿಗೆ ಹಣಕಾಸಿನ ನೆರವು ಒದಗಿಸುವುದು.
ಕೃಷಿ ಸಾಲ ಪಡೆಯುವುದು ಹೇಗೆ?(How to get loan through Kisan credit card)
ದೇಶದ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಕೃಷಿ ಸಾಲ ಪಡೆಯಬಹುದು. ಅದರಲ್ಲೂ ಸರಿಯಾದ ಸಮಯದಲ್ಲಿ ಲೋನ್ ರೀ ಪೇಮೆಂಟ್ ಮಾಡಿದವರಿಗೆ ಬಡ್ಡಿಯಲ್ಲಿ ಸಬ್ಸಿಡಿ ಕೂಡ ಸಿಗಲಿದೆ. ಯಾವುದೇ ಜಾಮೀನು ಇಲ್ಲದೆ ಬರೋಬ್ಬರಿ 1.60 ಲಕ್ಷದವರೆಗೆ ಸಾಲ ನೀಡಲಾಗುತ್ತದೆ. ಇದಕ್ಕೆ ವಿಮೆ ಕೂಡ ಮಾಡಿಸಬಹುದು.
ಕಿಸಾನ್ ಕ್ರೆಡಿಟ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸುವುದು ಹೇಗೆ?(How to apply for Kisan credit card)
ರೈತರು ಯಾವುದೇ ಬ್ಯಾಂಕ್ನಲ್ಲಿ ಬೇಕಾದ್ರೂ ಕಿಸಾನ್ ಕ್ರೆಡಿಟ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಬಹುದು. ಆದರೆ, ಒಂದು ಕಂಡೀಷನ್ ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಮಾತ್ರ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲಾಗುತ್ತದೆ.ನೀವು ಪಡೆಯುವ ಬೆಳೆಸಾಲವನ್ನು ಕಿಸಾನ್ ಕ್ರೇಡಿಟ್ ಕಾರ್ಡ್ ಮೂಲಕ ನೀಡಲಾಗುತ್ತದೆ.
ಕ್ರೆಡಿಟ್ ಕಾರ್ಡನ್ನು ಯಾರು ಪಡೆಯಬಹುದು?(Kisan credit card eligibility)
ರೈತರು ಯಾರು ಬೇಕಾದ್ರೂ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಬಹುದು. ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ರೂ. 3,00,000 ಇರಲಿದೆ. ಕ್ರೆಡಿಟ್ ಸ್ಕೋರ್ ಚೆನ್ನಾಗಿದ್ರೆ ಹೆಚ್ಚು ಸಾಲು ಕೂಡ ಸಿಗುತ್ತದೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಬಡ್ಡಿ ದರ ಎಷ್ಟು?(kisan credit card interest)
ಬಡ್ಡಿ ದರ ಕೇವಲ ಶೇ. 7 ರಷ್ಟಿದೆ, ಅದರಲ್ಲೂ 3 ರಷ್ಟು ಬಡ್ಡಿ ರಿಯಾಯಿತಿ ಇದೆ.
Kisan credit card loan-ನಿಮ್ಮ ಕಿಸಾನ್ ಕ್ರೆಡಿಟ್ ಕಾರ್ಡ್ ನಲ್ಲಿ ಎಷ್ಟು ಸಾಲ ಇದೆ? ಇನ್ನೂ ಎಷ್ಟು ಸಾಲ ಪಡೆಯಬಹುದು ಹೀಗೆ ಚೆಕ್ ಮಾಡಿ
ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು
https://landrecords.karnataka.gov.in/Service2/
ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ.
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಇದನ್ನೂ ಓದಿ
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427
ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್(Survey number) ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ(Survey number) ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ(crop loan) ಪಡೆಯಲಾಗಿದೆ. ಎಂಬ ಮಾಹಿತಿ ಇರುತ್ತದೆ.ಕಿಸಾನ್ ಕ್ರೆಡಿಟ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಪಡೆಯಲು ಅವಕಾಶ ಇರುವುದರಿಂದ,ಸಾಲದ ವಿವರ ನೊಡಿಕೊಂಡು ಉಳಿದ ಸಾಲ ಪಡೆಯಬಹುದು.
ಇದನ್ನೂ ಓದಿ
Waqf board property-ಸರ್ವೆ ನಂಬರ್ ಹಾಕಿ ನಿಮ್ಮ ಪಹಣೆ ನಿಮ್ಮ ಹೆಸರಿನಲ್ಲಿದೆಯೊ ಅಥವಾ ಬೇರೆಯವರ ಹೆಸರಿನಲ್ಲಿದೆಯೊ ಚೆಕ್ ಮಾಡಿಕೊಳ್ಳಿ - https://krushirushi.in/Waqf-board-property-1672
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ - https://krushirushi.in/Tahasildar-varification-status-approved-1634
]]>ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ 17.61 ಲಕ್ಷ ರೈತ ಫಲಾನುಭವಿಗಳಿಗೆ 2021.17 ಕೋಟಿ ರೂ. ಬೆಳೆ ವಿಮೆ(Bele vime) ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 22.97 ಲಕ್ಷ ರೈತ ಪ್ರಸ್ತಾವನೆಗಳು 17.60 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೋಂದಣಿಯಾಗಿದೆ. 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಈವರೆಗೆ 25148 ರೈತ ಪ್ರಸ್ತಾವನೆಗಳು 31690.28 ಹೆಕ್ಟೇರ್ ಪ್ರದೇಶಕ್ಕೆ ನೋಂದಣಿಯಾಗಿದ್ದು, ಕಾರ್ಯ ಪ್ರಗತಿಯಲ್ಲಿದೆ ಎಂದರು.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ನೇರ ನಗದು ವರ್ಗಾವಣೆ ಮೂಲಕ ರಾಜ್ಯದ ರೈತರಿಗೆ 2100 ಕೋಟಿ ರೂ ಬೆಳೆ ವಿಮೆ(Crop insurance)ಪಾವತಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಹೇಳಿದೆ.
ಜಿಕೆವಿಕೆ ಆವರಣದಲ್ಲಿ ಬೆಂಗಳೂರು ಕೃಷಿ ವಿವಿ ವತಿಯಿಂದ ಏರ್ಪಡಿಸಲಾಗಿದ್ದ ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು 2,100 ಕೋಟಿ ರೂಪಾಯಿ ಬೆಳೆ ವಿಮೆ ಹಣವನ್ನು(Belevime hana) ನೇರ ನಗದು ವರ್ಗಾವಣೆ (Direct benefit transfer)ಮೂಲಕ ರೈತರಿಗೆ ಭರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಅರ್ಹರ ಬಿಪಿಎಲ್ ಕಾರ್ಡ್ಗಳನ್ನು ಸರಕಾರ ಯಾವುದೇ ಕಾರಣಕ್ಕೂ ರದ್ದುಪಡಿಸುವುದಿಲ್ಲಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘‘ತೆರಿಗೆ ಕಟ್ಟುವವರು ಹಾಗೂ ಸರಕಾರಿ ನೌಕರರಿಗೆ ಬಿಪಿಎಲ್ ಕಾರ್ಡ್ ನೀಡಲು ಸಾಧ್ಯವಿಲ್ಲ. ಇಂತಹವರ ಬಳಿ ಬಿಪಿಎಲ್ ಕಾರ್ಡ್ ಇದ್ದರೆ ವಾಪಸ್ ಪಡೆದು ಎಪಿಎಲ್ ಕಾರ್ಡ್ ನೀಡಲಾಗುವುದು,’’ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಪಿಎಲ್ ನಿಂದ ಎಪಿಎಲ್ ಕಾರ್ಡ್ ಗಳಾಗಿ ಬದಲಾಯಿಸಿದ ರಾಜ್ಯ ಸರ್ಕಾರ, ನಿಮ್ಮ ಕಾರ್ಡ್ ಎಪಿಎಲ್ ಅಥವಾ ಬಿಪಿಎಲ್ ಹೀಗೆ ಚೆಕ್ ಮಾಡಿ - https://krushirushi.in/BPL-to-APL-1684
Ration card eligible list-2024:ಗ್ರಾಮವಾರು ಅರ್ಹ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ,ನಿಮ್ಮ ಗ್ರಾಮದ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ.
ಅನರ್ಹ ಪಟ್ಚಿಯಲ್ಲಿ(cancelled suspended ration card list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಈ ತಿಂಗಳಿನಿಂದ ಅನ್ನಭಾಗ್ಯ ಹಾಗೂ ಗೃಹಲಕ್ಷ್ನಿ ಹಣ ಸಿಗುವುದಿಲ್ಲ
ಬೆಳೆ ಸಮೀಕ್ಷೆ(Bele samikshe) ಮೂಲಕ ಸಂಗ್ರಹಿಸಲಾದ ಬೆಳೆ
ಮಾಹಿತಿ ಕುರಿತು ಆಕ್ಷೇಪಣೆ ಸಲ್ಲಿಸಲು ನ. 20ರವರೆಗೆ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ ದರ್ಶಕ ಮೊಬೈಲ್ ಆ್ಯಪ್(Bele darshaka App)ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ(Crop survey portal) ಮೂಲಕ ಆಕ್ಷೇಪಣೆ ಸಲ್ಲಿಸಬಹುದು.
ಬೆಳೆ ಸಮೀಕ್ಷೆ ದತ್ತಾಂಶವನ್ನು ಬೆಳೆವಿಮೆ(Bele vime), ಬೆಂಬಲ ಬೆಲೆ ಯೋಜನೆಯಡಿ(MSP) ಬೆಳೆ ಮಾರಾಟ ಮಾಡಲು, ಬೆಳೆ ನಷ್ಟ ಪರಿಹಾರ(bele hani) ಹಾಗೂ ಇತರ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಳಕೆ ಮಾಡಲಾಗುವುದು. ಆದ್ದರಿಂದ ರೈತರು ತಾವು ಬೆಳೆದ ಬೆಳೆ ಹಾಗೂ ಬೆಳೆ ಸಮೀಕ್ಷೆಯಲ್ಲಿ (crop survey)ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಖಾತ್ರಿಪಡಿಸಿಕೊಳ್ಳಬೇಕು. ಒಂದು ವೇಳೆ ಭಿನ್ನವಾಗಿದ್ದಲ್ಲಿ, ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ನಂತರದ ಆಕ್ಷೇಪಣೆ ಸ್ವೀಕರಿಸಲಾಗುವುದಿಲ್ಲ.
ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಗೂಗಲ್ ಪ್ಲೇ ಸ್ಟೋರ್ ಮೂಲಕ ಅಥವಾ https://play.google.com/
ನಂತರ ರೈತ select ಮಾಡಿ
ನಂತರ ವರ್ಷ,ಋುತು, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ.
ನಂತರ ಸರ್ವೇ ನಂಬರ್ ಹಾಕಿ,ಹಿಸ್ಸಾಆಯ್ಕೆ ಮಾಡಿ,ಸಮೀಕ್ಷೆಯ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ನಂತರ ಬೆಳೆವಿವರ ವೀಕ್ಷಿಸಿ ಮೇಲೆ ಕ್ಲಿಕ್ ಮಾಡಿ
ನಂತರ photo ಮೇಲೆ ಕ್ಲಿಕ್ ಮಾಡಿದರೆ ನೀವು ಬೆಳೆದ ಬೆಳೆ ಹಾಗೂ ಫೋಟೊ ಅಪ್ಲೊಡ್ ಸರಿಯಾಗಿರುವುದನ್ನು ಪರಿಕ್ಷೀಸಿ.
ಬೆಳೆ ಸಮಿಕ್ಷೆ ಸರಿಯಾಗಿರದಿದ್ದರೆ,ಮತ್ತೆ ಬೆಳೆ ಸಮಿಕ್ಷೆ ಮಾಡಿ ಸರಿಪಡಿಸಲು ಅವಕಾಶವಿರುತ್ತದೆ.
ಏನಿದು ಬೆಳೆ ದರ್ಶಕ ಆ್ಯಪ್?
ಈ ಅಪ್ಲಿಕೇಶನ್ ಮಾಡಿದ ಉದ್ದೇಶ ಬೆಳೆ ಸಮೀಕ್ಷೆಯನ್ನು (Crop survey)ನೋಡಲು.. ಇದರಲ್ಲಿ ನೀವು ಅಪ್ಲೋಡ್ ಮಾಡಿದ ಚಿತ್ರಗಳನ್ನು ಮತ್ತು ಸಮೀಕ್ಷೆ ಮಾಡಿದ ಸರ್ವೇಯರ್ ವಿವರಗಳನ್ನು ನೋಡಬಹುದು.
ತಮ್ಮ ಮೊಬೈಲ್ ಮೂಲಕ ಬೆಳೆಗಳ ಸಮೀಕ್ಷೆ(Bele samikshe) ಮಾಡಬಹುದು. ಅಥವಾ ನೆರೆಯ ಖಾಸಗಿ ವ್ಯಕ್ತಿಗಳ (Private resident) ಮೊಬೈಲ್ ಮೂಲಕ ಜಮೀನುಗಳ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ನಿಮ್ಮ ಜಮೀನಿನ ಸರ್ವೆ ನಂಬರ್(Survey number) ಮತ್ತು ಜಮೀನಿನ ಫೊಟೋ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಮೊಬೈಲ್ ನಲ್ಲಿ Bele darshak app ಮೂಲಕ ಕ್ಷಣಾರ್ಧದಲ್ಲಿ ನೋಡಬಹುದು. ಒಂದು ವೇಳೆ ತಪ್ಪಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು.
ಬೆಳೆ ದರ್ಶಕ್ ಆ್ಯಪ್(bele darshaka app) ಇನ್ಸ್ ಸ್ಟಾಲ್ ಮಾಡಿಕೊಂಡ ನಂತರ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಇನ್ನಿತರ ಮಾಹಿತಿ ನಮೂದಿಸಬೇಕು. ಬೆಳೆ ದರ್ಶಕ್ ಆ್ಯಪ್(Bele darshaka application) ಮೂಲಕ ಜಮೀನಿನಲ್ಲಿ ಬೆಳೆ ಸಮೀಕ್ಷೆ (Bele samikshe)ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ (Crop survey)ಸಮಯದಲ್ಲಿ ತೆಗೆಯಲಾದ ಜಿಪಿಎಸ್ ಆಧಾರಿತ (GPS Photo)ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ಅಲ್ಲದೆ ರೈತರ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ, (Mobile number)ರೈತರು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ನೋಡಬಹುದು.
ಒಂದು ವೇಳೆ ಮಾಹಿತಿ ತಪ್ಪಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು.ಮೇಲ್ವಿಚಾರಕರು ಸೂಕ್ತ ಬೆಳೆಗಳನ್ನು ದಾಖಲಿಸಿ ರೈತರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುತ್ತಾರೆ. ಇನ್ನೇಕೆ ತಡ ಒಮ್ಮೆ ನಿಮ್ಮ ಬೆಳೆ ಸಮೀಕ್ಷೆಯಲ್ಲಿ ಎಲ್ಲಾ ಸರ್ವೆ ನಂಬರ್, ಮಾಹಿತಿ ಹಾಗೂ ಫೋಟೋ ಸರಿಯಾಗಿ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಡಿ
]]>ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಕೆಗೆ ಮತ್ತೆ ಕ್ಯಾನ್ಸರ್ಕಾರಕ ಪಟ್ಟ ದಕ್ಕಿದೆ. ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ಒ)ಯ ಅಂಗಸಂಸ್ಥೆಯೊಂದು ಅಡಕೆ ಬಳಕೆ ನಿಯಂತ್ರಿಸಿದರೆ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ ಪ್ರಮಾಣವನ್ನು ಬಹುತೇಕ ತಗ್ಗಿಸಬಹುದು ಎಂದು ಇತ್ತೀಚೆಗೆ ವರದಿ ನೀಡಿದೆ.
ಈ ವರದಿಯು ಅಡಕೆ ಬಳಕೆ ಮೇಲೆ ನಿಯಂತ್ರಣ ಹೇರುವ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಇದೀಗ ತಂಬಾಕು ಮಾದರಿಯಲ್ಲೇ ಅಡಕೆ ಬೆಳೆ ನಿಯಂತ್ರಣ ಉಪಕ್ರಮಗಳಿಗೂ ಕಾರಣವಾಗುವ ಆತಂಕ ಬೆಳೆಗಾರರಲ್ಲಿ ಮೂಡಿದೆ.
ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಅಂಗಸಂಸ್ಥೆ ಇಂಟರ್ ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆಯಂಡ್ ಕ್ಯಾನ್ಸರ್(ಐಎಆರ್ಸಿ) 2024 ಅ. 9ರಂದು ಬಿಡುಗಡೆ ಮಾಡಿದ ವರದಿಯಲ್ಲಿ ಮತ್ತೆ ಅಡಕೆಯನ್ನು ಕ್ಯಾನ್ಸರ್ ಕಾರಕ ಎಂದು ಹೇಳಲಾಗಿದೆ. ಈ ವರದಿ ದಿ ಲ್ಯಾನ್ಸೆಟ್ ಅಂಕಾಲಜಿ ಎಂಬ ಅಂತಾರಾಷ್ಟ್ರೀಯ ಜರ್ನಲ್ನಲ್ಲಿ ಪ್ರಕಟವಾಗಿದೆ. ಐಎಆರ್ಸಿ ಸಂಸ್ಥೆ ಬಾಯಿ ಕ್ಯಾನ್ಸರ್ ಬಗ್ಗೆ ಸಂಶೋಧನೆ ನಡೆಸುತ್ತಿದ್ದು, ಪ್ರತಿ ಐದು ವರ್ಷಕ್ಕೊಮ್ಮೆ ವಿಶ್ವ ಕ್ಯಾನ್ಸರ್ ವರದಿ ಪ್ರಕಟಿಸುತ್ತದೆ. ಈ ಹಿಂದಿನ ಐಎಆರ್ಸಿಯ ವರದಿಗಳಲ್ಲೂ ಅಡಕೆ ಕ್ಯಾನ್ಸರ್ಕಾರಕ ಎಂದೇ ಉಲ್ಲೇಖವಾಗಿದ್ದರೂ ಈಗಿನ ವರದಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ.
ಅಡಕೆ ಬೆಳೆ ನಿಯಂತ್ರಣಕ್ಕೆ ಶಿಫಾರಸು:
ಐಎಆರ್ಸಿ ವರದಿಯಲ್ಲಿ ತಂಬಾಕು ಮಿಶ್ರಿತ ಅಡಕೆ ಮಾತ್ರವಲ್ಲ, ನೇರವಾಗಿ ಅಡಕೆ ಬೆಳೆಯನ್ನೇ ನಿಯಂತ್ರಿಸುವ ಪ್ರಸ್ತಾಪವಿದೆ. ಹೊಗೆ ರಹಿತ ತಂಬಾಕು(ತಿಂದು ಉಗುಳುವ) ಮತ್ತು ಅಡಕೆ ಬಳಕೆಗೆ ಕಡಿವಾಣ ಹಾಕುವ ಮೂಲಕ ವಿಶ್ವದ ಮೂರನೇ ಒಂದರಷ್ಟು ಬಾಯಿ ಕ್ಯಾನ್ಸರ್ ತಡೆಯಬಹುದು ಎಂಬ ವರದಿಯಲ್ಲಿ ಹೇಳಲಾಗಿದೆ.
ಜಾಗತಿಕವಾಗಿ ಹೊಗೆ ರಹಿತ ತಂಬಾಕಿನಿಂದ ಉಂಟಾಗಿರುವ 1,20,200 ಬಾಯಿ ಕ್ಯಾನ್ಸರ್ ಪ್ರಕರಣಗಳಲ್ಲಿ 83,400 ಪ್ರಕರಣ ಭಾರತದಲ್ಲೇ ದಾಖಲಾಗಿದೆ. 2022ರಲ್ಲಿ ಈ ಅಧ್ಯಯನ ನಡೆಸಿದ್ದು, ಬಹುತೇಕ ಅಧ್ಯಯನ ಉತ್ತರ ಭಾರತದಲ್ಲೇ ನಡೆದಿರುವುದು ಗಮನಾರ್ಹ. ಜಾಗತಿಕವಾಗಿ 300 ಮಿಲಿಯನ್ ಮಂದಿ ಹೊಗೆರಹಿತ ತಂಬಾಕು ದಾಸರಾಗಿದ್ದು, 600 ಮಿಲಿಯನ್ ಮಂದಿ ಅಡಕೆ ಬಳಸುತ್ತಾರೆ. ದಕ್ಷಿಣ ಮಧ್ಯ ಏಷ್ಯಾ, ಆಗ್ನೇಯ ಏಷ್ಯಾ ಮತ್ತು ಇತರೆ ಹೆಚ್ಚಿನ ದೇಶಗಳಲ್ಲಿ ಅಡಕೆ ಬಳಕೆಯಲ್ಲಿದೆ. ಹೊಗೆ ರಹಿತ ತಂಬಾಕು ಮತ್ತು ಅಡಕೆ ಉತ್ಪನ್ನಗಳು ಗ್ರಾಹಕರಿಗೆ ವಿವಿಧ ರೂಪದಲ್ಲಿ ಲಭ್ಯವಿರುತ್ತವೆ.
ತಂಬಾಕು, ಗುಟ್ಕಾ ಹಾಗೂ ಅಡಕೆಯಂಥ ಹೊಗೆರಹಿತ ತಂಬಾಕು ಉತ್ಪನ್ನಗಳ ಹೆಚ್ಚಿನ ಬಳಕೆಯಿಂದ ಏಷ್ಯಾದ ದೇಶಗಳಲ್ಲಿ ಭಾರತ ಅತೀ ಹೆಚ್ಚು ಬಾಯಿ ಕ್ಯಾನ್ಸರ್ ಪ್ರಕರಣ ಹೊಂದಿದೆ ಎಂದು ಕ್ಯಾನ್ಸರ್ ವಿಭಾಗದ ವಿಜ್ಞಾನಿ ಡಾ.ಹ್ಯಾರಿಯೆಟ್ ರುಮ್ಗೇ ಅವರು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಹೊಗೆರಹಿತ ತಂಬಾಕು ಮತ್ತು ಅಡಕೆ ಬಳಕೆಯಿಂದ ಉಂಟಾಗುವ ಎಲ್ಲ ಬಾಯಿ ಕ್ಯಾನ್ಸರ್ ಪ್ರಕರಣಗಳಲ್ಲಿ ಭಾರತದಲ್ಲಿ 83,400, ಬಾಂಗ್ಲಾದೇಶ 9,700, ಪಾಕಿಸ್ತಾನ 8,900, ಚೀನಾ 3,200, ಮ್ಯಾನ್ಮಾರ್ 1,600, ಶ್ರೀಲಂಕಾ 1,300, ಇಂಡೋನೇಷ್ಯಾ 990 ಹಾಗೂ ಥಾಯ್ಲ್ಯಾಂಡ್ನಲ್ಲಿ 785 ಕೇಸ್ಗಳು ವರದಿಯಾಗಿದೆ.
ಅಡಕೆ ಬೆಳೆ ಮೇಲೆ ಪರಿಣಾಮ:
ಅಡಕೆ ಕ್ಯಾನ್ಸರ್ಕಾರಕ ಎಂಬ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ನಲ್ಲಿ ಕೆಲ ವರ್ಷಗಳಿಂದ ವಿಚಾರಣೆ ನಡೆಯುತ್ತಲೇ ಇದೆ. 1998 ರಿಂದಲೂ ಅಂತಾರಾಷ್ಟ್ರೀಯ ಸಂಶೋಧನಾ ಪತ್ರಿಕೆಗಳಲ್ಲಿ ಅಡಕೆ ಹಾನಿಕಾರಕ ಎಂದೇ ಉಲ್ಲೇಖಿಸಲಾಗುತ್ತಿದೆ. ಅಡಕೆ ಆರೋಗ್ಯದಾಯಕ, ಸಾಂಪ್ರದಾಯಿಕವಾಗಿಯೂ ಅಡಕೆ ಬಳಸುತ್ತಾರೆ. ಮೌಲ್ಯವರ್ಧಿತ ಉತ್ಪನ್ನವಾಗಿಯೂ ಉಪಯೋಗಿಸುತ್ತಾರೆ ಎಂಬುದನ್ನು ಆಧಾರ ಸಹಿತ ಸಾಬೀತುಪಡಿಸಲಾಗಿದೆ. ಇದರ ಜತೆಗೆ ಅಡಕೆ ಕ್ಯಾನ್ಸರ್ಕಾರಕ ಅಲ್ಲ ಎಂದು ಮಾರುಕಟ್ಟೆ ಅಧ್ಯಯನ ವರದಿಗಳೂ ಅಭಿಪ್ರಾಯ ಮಂಡಿಸಿದ್ದರೂ ಅದು ಐಎಆರ್ಸಿ ತಲುಪಿಲ್ಲ. ಹೀಗಾಗಿ ಅಡಕೆ ಕ್ಯಾನ್ಸರ್ಕಾರಕ ಅಲ್ಲ ಎಂದು ಸಾಬೀತುಪಡಿಸಲು ಸಾಧ್ಯವಾಗದೇ ಇರುವುದು ಈಗ ಅಡಕೆ ಬೆಳೆ ಮೇಲೆ ನಿಷೇಧದ ತೂಗುಗತ್ತಿಗೆ ಕಾರಣವಾಗಿದೆ.
ರೋಗಬಾಧೆಯಿಂದಾಗುವ ಅಡಕೆ ಬೆಳೆಹಾನಿ ಪರಿಹಾರಕ್ಕೆ ಯೋಜನೆಯಿಲ್ಲ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ
ಎಚ್ಚರಿಕೆ ಹೆಜ್ಜೆ ಇಡುತ್ತಿರುವ ಚೀನಾ:
ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಡಕೆ ಹಾನಿಕಾರಕ ಎಂದು ವರದಿಗಳು ಬರುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ಅಡಕೆ ಬೆಳೆಯುವ ಚೀನಾ ಅಡಕೆ ನಿಷೇಧಕ್ಕೂ ಮೊದಲೇ ಮೌಲ್ಯವರ್ಧಿತ ಆಹಾರ ಉತ್ಪನ್ನವಾಗಿ ಮಾರ್ಪಡಿಸಿ ಅಡಕೆ ಬೆಳೆ ಉಳಿಸಿಕೊಳ್ಳಲು ಉಪಾಯ ಕಂಡುಕೊಂಡಿದೆ. ಮುಂದಿನ ಡಬ್ಲ್ಯೂಎಚ್ಒ ಶೃಂಗ ಚೀನಾದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಡಕೆ ವಿಚಾರದಲ್ಲಿ ಚೀನಾ ಈಗಾಗಲೇ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.
ಹಾಗಾದರೆ ಭಾರತೀಯರು ನಾವೇನು ಮಾಡಬಹುದು?ಇಲ್ಲಿದೆ ಪರಿಹಾರ
ಎಲೆ ಎಂದಾಕ್ಷಣ ಅಡಿಕೆ ಎಂಬ ಮಾತು ಹಿಂದೆನೇ ಬರುತ್ತೆ, ಅಡಿಕೆ ತಿನ್ನಲು ರುಚಿಯ ಜೊತೆಗೆ ಆರೋಗ್ಯಪೂರ್ಣ ಹೌದು ಹೀಗಾಗಿ ಅಡಿಕೆಯಲ್ಲಿರುವ ಔಷಧಿ ಗುಣಗಳ ಬಗ್ಗೆ ತಿಳಿದುಕೊಳ್ಳುವ ಲೇಖನ ನಿಮಗಾಗಿ
ಅಡಿಕೆ ಮಹತ್ವವನ್ನು ನಮ್ಮ ಗಾದೆಗಳಲ್ಲಿ ಅರ್ಥವತ್ತಾಗಿ ಹೇಳಿದ್ದಾರೆ. ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬಾರದು ಅಡಿಕೆ ಕತ್ತರಿ ಒಳಗೆ ಸಿಕ್ಕಿಕೊಂಡಂತೆ ಹೋದರೆ ಒಂದು ಗೂಟ ಅಡಿಕೆ ಆದರೆ ಒಂದು ಮರ ಮುಂತಾದ ಗಾದೆಗಳಲ್ಲಿ ಅಡಿಕೆಯ ಪ್ರಮುಖತೆಯನ್ನು ವರ್ಣಿಸಲಾಗಿದೆ.
ಅಡಿಕೆಯ ವೈವಿಧ್ಯತೆ ಹಲವಾರು ಬಗೆ
ಇದಕ್ಕೆ ಸಾಮಾಜಿಕ ಧಾರ್ಮಿಕ ಹಾಗೂ ಆರ್ಥಿಕ ಮಹತ್ವಗಳಿವೆ. ಅಡಿಕೆ ಇಲ್ಲದೆ ಯಾವುದೇ ಪೂಜೆ ಪುನಸ್ಕಾರ ಸಭೆ ಸಮಾರಂಭ ಶುಭ ಕಾರ್ಯ ಅತಿಥಿಸತ್ಕಾರ ಸನ್ಮಾನ ಮದುವೆ ಮುಂಜಿ ಉಪನಯನ ನಾಮಕರಣ ಶವಸಂಸ್ಕಾರ ಇತ್ಯಾದಿ ನಡೆಯುವುದಿಲ್ಲ.
ಅಡಿಕೆಯ ಔಷಧೀಯ ಗುಣಗಳು
ಅಡಿಕೆ ಔಷಧಿಯ ಗುಣಗಳಿಂದಾಗಿಯೇ ಇದನ್ನು ಆಹಾರದ ನಂತರ ಹಾಗೂ ಪೂರ್ವದಲ್ಲಿ ಸೇವಿಸುವ ರೂಢಿ ಇದೆ
ಎಲೆ ಮತ್ತು ಸುಣ್ಣದೊಂದಿಗೆ ಅಡಿಕೆಯನ್ನು ಜಗಿದಲ್ಲಿ ಬಾಯಿಯ ದುರ್ಗಂಧ ದೂರಗೊಳ್ಳುತ್ತದೆ.
ಅಡಿಕೆಯನ್ನು ಬಯಡಿಸುವುದರಿಂದ ದವಡೆ ಮತ್ತು ಕೆನ್ನೆಗೆ ಒಳ್ಳೆಯ ವ್ಯಾಯಾಮವಾಗುತ್ತದೆ.
ತಲೆ ಸಿಡಿತ ಹಲ್ಲು ನೋವು ನಾರು ಹುಣ್ಣು ತಿವಿಸೋರುವುದು ಮುಂತಾದವುಗಳಿಗೆ ಅಡಿಕೆ ಸೇವನೆ ಉಪಯುಕ್ತ
ಅಡಿಕೆಯ ಸೇವನೆ ಕೆಲವೊಂದು ಅಣು ಜೀವಿಗಳನ್ನು(Anti Bacterial property)ಹತ್ತಿಕ್ಕವಲ್ಲದು.
ಅಡಿಕೆಯನ್ನು ಹದವಾಗಿ ಹುರಿದು ಪುಡಿ ಮಾಡಿ ಕಾಫಿ ಅಂತ ಪಾನೀಯವನ್ನು ತಯಾರಿಸಿ ಕುಡಿಯುವುದುಂಟು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆಯಿಂದ ತಯಾರಿಸಿದ ಸುಪಾನ ಹಾಗೂ ಪೂಗ ಪಾನಿಯಗಳು ಅತಿ ಜನಪ್ರಿಯ
ಆಯುರ್ವೇದದಲ್ಲಿ ವಿಶೇಷವಾಗಿ ಹಲವು ವಿಧದ ಚರ್ಮರೋಗಗಳಿಗೆ ( ವಿಸರ್ಪ ಗಜಕರ್ಣ ತುರಿಕಚ್ಚಿ ಇತ್ಯಾದಿ ) ಎಲೆ ಅಡಿಕೆ ಹಾಗೂ ಹಣ್ಣು ಅಡಿಕೆಗಳನ್ನ ಉಪಯೋಗಿಸುತ್ತಾರೆ.
ಈ ಗುಣಗಳಿಂದ ಅಡಿಕೆಯನ್ನು ಔಷಧಿಕೃತ ಸಾಬೂನುಗಳ ತಯಾರಿಕೆಯಲ್ಲಿ ಬಳಸಲು ವಿಫಲ ಅವಕಾಶವಿದೆ.
ಮಧುಮೇಹ ಹಾಗೂ ರಕ್ತದ ಒತ್ತಡಗಳಲ್ಲಿ ಅಡಿಕೆಯು ವಿಶೇಷ ಪರಿಣಾಮಕಾರಿಯಾಗಿರುವುದು ಎಂಬುದನ್ನು ಬಹಳ ಹಿಂದೆ ಆಯುರ್ವೇದ ತಜ್ಞರು ಕಂಡುಕೊಂಡಿದ್ದಾರೆ.
ಟೇಪ್ ವರ್ಮ್ ಜಂತುಹುಳು ಇತ್ಯಾದಿಗಳಿಗೆ ಅಡಿಕೆ ಪರಿಣಾಮಕಾರಿ ಔಷಧಿ.
ಅಡಿಕೆಯಲ್ಲಿ ಹಲ್ಲು ಪುಡಿ ತಯಾರಿಕೆಯಲ್ಲೂ ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ಟೂತ್ಪೇಸ್ಟ್ ಗಳನ್ನು ಉಪಯೋಗಿಸಬಹುದಾಗಿದೆ.
ವಾತ ವ್ಯಾದಿಗೆ ಅಡಿಕೆಯನ್ನು ಉಪಯೋಗಿಸುತ್ತಾರೆ
ಅಡಿಕೆಯಲ್ಲಿ tasanin 15 ಪರ್ಸೆಂಟ್ ಕೊಬ್ಬು 14% ಅರೆ ಕೈ 0.1% ಅರೆಕೋಲೈಲ್ 0.07% ಮತ್ತು ಕೆಲವು ಸಸ್ಯ ಕ್ಷಾರ ಅಲ್ಕ ಲೊಯಿಲ್ಡ್ ಗಳಿವೆ.
ಅರೆ ಕೋ ಲೈನ್ ಎಂಬ ಸಸ್ಯಕ್ಶರ ಆಲ್ಕಲೈನಲ್ಲಿ ಸ್ವಲ್ಪ ಪ್ರಮಾಣದ ಉತ್ತೇಜನ ಜನ್ನ ಅಂಶವಿರುತ್ತದೆ. ಆ ಕಾರಣದಿಂದ ಕೃಷಿ ಕೆಲಸಗಳಲ್ಲಾಗಲಿ ಅಥವಾ ಇತರ ಕೆಲಸ ಕಾರ್ಯಗಳಲ್ಲಿ ತೊಡಗಿರುವವರು ಆಯಾಸ ಪರಿಹಾರಕ್ಕಾಗಿ ಸ್ವಲ್ಪ ಹೊತ್ತು ಎಲೆ ಅಡಿಕೆ ಜಗೆಯುವುದು ಸಾಮಾನ್ಯ.
ಅಡಿಕೆಯಲ್ಲಿ ಟ್ಯಾನಿಂಗ್ ಅಥವಾ ಚೊ lಗರು( ಹಸಿ ಅಡಿಕೆಯನ್ನು ಸಂಸ್ಕರಿಸಿ ಬೇಯಿಸಿದಾಗ ಲಭಿಸುವ ಅಂಶ )ಎಂಬ ಅಂಶವಿರುತ್ತದೆ. ಅದನ್ನು ಚರ್ಮದ ಮಾಡಲು ಮಸಿ ಅಥವಾ ಶಾಹಿ ರಟ್ಟುಗಳನ್ನು ಅಂಟಿಸಲು ಒಂದು ವಸ್ತುವಾಗಿ ಹಾಗೂ ಉಣ್ಣೆ ಮತ್ತು ಕಾಗದ ಗಳಿಗೆ ಬಣ್ಣ ಹಚ್ಚಲು ಉಪಯೋಗಿಸಲಾಗುತ್ತದೆ.
ಅಡಿಕೆಯಿಂದ ತಯಾರಿಸಿದ ಬಣ್ಣವನ್ನು ಬಟ್ಟೆಗಳಿಗೆ ಬಣ್ಣ ಕೊಡಲು ಬಳಸುವುದುಂಟು.
ಅಡಿಕೆ ಕಾಯಿಗಳಲ್ಲಿ 10 ರಿಂದ 14% ಕೊಬ್ಬು ಜಿಡ್ಡು ಇರುತ್ತದೆ ಸದ್ಯಕರಿಸಿದ ಅಡಿಕೆ ಕೊಬ್ಬು ಬೆಣ್ಣೆ ಅಥವಾ ಕೋಕೋ ಬೆನ್ನಿಗಿಂತ ಗಟ್ಟಿ ಇರುತ್ತದೆ ಇದರಿಂದ ತಯಾರಾದ ಸಿಹಿ ತಿನಿಸುಗಳು ವನಸ್ಪತಿಗಳನ್ನು ಬಳಸಿ ತಯಾರಿಸುವ ತಿಂಡಿಗಳಷ್ಟೇ ಉತ್ತಮವಾಗಿರುತ್ತದೆ.
ಸುಗಂಧ ಸುಪಾರಿ ಅಥವಾ ಪರಿಮಳಯುಕ್ತ ಅಡಿಕೆ ಪುಡಿ
ಒಣಗಿಸಿದ ಅಡಿಕೆಯನ್ನು ಒಡೆದು ಸಣ್ಣ ಸಣ್ಣ ಚೂರು ಅಥವಾ ಹೋಳುಗಳನ್ನಾಗಿ ಮಾಡಿ ಸುವಾಸನೆಯುಕ್ತ ವಸ್ತು (ಸುಗಂಧದ ದ್ರವ್ಯ) ಗಳು, ಅಡಿಕೆ ಪುಡಿ ಕಲ್ಲು ಸಕ್ಕರೆ ಲವಂಗ ಆಹಾರದ ಬಣ್ಣ ಪಚ್ಚ ಕರ್ಪೂರ ಮುಂತಾದವುಗಳನ್ನು ಸೇರಿಸಿ ಪೊಟ್ಟಣಗಳನ್ನಾಗಿ ಮಾಡಿ ಮಾರಾಟ ಮಾಡುತ್ತಾರೆ
ಈ ಸುಫರಿಯನ್ನು ಚಾಲಿ ಮತ್ತು ಕೆಂಪಡಿಕೆಗಳನ್ನು ಬಳಸಿ ತಯಾರಿಸುತ್ತಾರೆ
ಒಣಕೊಬ್ಬರಿ ಸಕ್ಕರೆ ಮತ್ತು ಸಾಂಬಾರ್ ವಸ್ತುಗಳ ಪುಡಿಯಲ್ಲಿ ಸೇರಿಸುವುದುಂಟು.
ಅಡಿಕೆ ಚೂರುಗಳು ಲವಂಗ ಜಾಯಿಕಾಯಿ ಜಾಪತ್ರೆ ಏಲಕ್ಕಿ ದಾಲ್ಚಿನ್ನಿ, ಕುಂಕುಮ ಕೇಸರಿ ಮೆಣಸು ಮುಂತಾದವುಗಳನ್ನು ಬಳಸಿ ಇದನ್ನು ತಯಾರಿಸುತ್ತಾರೆ.
ಇತರ ಎಲ್ಲಾ ವಸ್ತುಗಳೊಂದಿಗೆ ಅಡಿಕೆ ಚೂರುಗಳನ್ನು ಬೇರೆ ಸಿಟ್ಟು ಗುಲಾಬಿ ತೈಲವನ್ನು ಈ ಮಿಶ್ರಣಕ್ಕೆ ಚುಮುಕಿಸಿ ಆನಂತರ ಡಬ್ಬಿ ಗಳಲ್ಲಿ ತುಂಬಿ ಭದ್ರಪಡಿಸುತ್ತಾರೆ
ವಿದೇಶಿ ವಸ್ತ್ರಕ್ಕೆ ಅಡಿಕೆ ಬಣ್ಣದ ಬಳಕೆ
ವಸ್ತ್ರೋದ್ಯಮದಲ್ಲಿ ಅಡಿಕೆಯ ಬಣ್ಣದ ಬಳಕೆ ಈಗ ವಿದೇಶಗಳಲ್ಲಿಯೂ ಹೆಚ್ಚುತ್ತಿದೆ. ಈ ನೈಸರ್ಗಿಕ ಬಣ್ಣದ ಉತ್ಕೃಷ್ಟತೆಯನ್ನು ಇನ್ನಷ್ಟು ಹೆಚ್ಚಿಸಿದರೆ ಅಡಿಕೆ ಕೃಷಿಯಲ್ಲಿ ಹೊಸ ಕ್ರಾಂತಿ ಉಂಟಾಗುವ ಸಾಧ್ಯತೆ ಇದೆ ಎಂದು ಅಡಿಕೆ ಕೃಷಿ ತಜ್ಞರು ಹೇಳುತ್ತಿದ್ದಾರೆ.
ಕೆಂಪಡಿಕೆಯ ಕೊಯ್ಲೋತರ ಸಂಸ್ಕರಣೆಯ ಉಪ ಉತ್ಪನ್ನ ಚೊಗರು ಅಥವಾ ತೊಗುರು ಅನ್ನು ನೈಸರ್ಗಿಕ ಬಣ್ಣಕ್ಕೆ ಬಳಸಲಾಗುತ್ತಿದೆ. ಅಡಿಕೆಯ ತೊಗರಿನಿಂದ ಬಣ್ಣ ತಯಾರಿಕೆ ಬಹಳ ವರ್ಷಗಳಿಂದ ಇದೆ. ಅದು ಅತಿ ಕಡಿಮೆ ಪ್ರಮಾಣದಲ್ಲಿ ಇತ್ತು ಈಗ ಜಾಗತಿಕವಾಗಿ ಬೇಡಿಕೆ ಪಡೆದುಕೊಳ್ಳುತ್ತಿದೆ.
ಮಧ್ಯವರ್ತಿಗಳಿಂದ ಚೊಗರು ಖರೀದಿಸಿ ಅಲ್ಪ ಪ್ರಮಾಣದಲ್ಲಿ ಸಂಸ್ಕರಿಸಿ ರಾಜಸ್ಥಾನ್ ಗುಜರಾತ್ ಉತ್ತರಪ್ರದೇಶದ ಕಂಪನಿಗಳಿಗೆ ಪೂರೈಸುತ್ತಿದ್ದೇವೆ ಎನ್ನುತ್ತಾರೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶೆಡ್ತಿಕೆರೆ ಗ್ರಾಮದ ಹವ್ಯಕ ಕೃಷಿ ಉದ್ಯೋಗ ಮತ್ತು ಕೈಗಾರಿಕಾ ಕಂಪನಿಯ ಸಂತೋಷ್ ಕುಮಾರ್.
ಹಾಲಿನ ಪೌಡರ್ ನಂತೆ ಅಡಿಕೆಯ ತೊಗರಿನಿಂದ ಪೌಡರನ್ನು ಬೆಂಗಳೂರು ಹಾಗೂ ರಾಜಸ್ಥಾನದಲ್ಲಿ ಉತ್ಪಾದಿಸಿ ನಟ್ ಬ್ರೌನ್ ಹೆಸರಿನಲ್ಲಿ ಈ ಬಣ್ಣವನ್ನು ದೇಶ ವಿದೇಶಗಳಿಗೆ ಪೂರೈಸಲಾಗುತ್ತಿದೆ ಇದಕ್ಕೆ ಬೇಡಿಕೆಯು ಹೆಚ್ಚುತ್ತಿದೆ ಕಳಪೆ ಗುಣಮಟ್ಟದ ಅಡಿಕೆಯ ಬಣ್ಣ ವೃದ್ಧಿಸಲು ತೊಗರನ್ನು ಈಗಲೂ ಕೆಲವು ವ್ಯಾಪಾರಿಗಳು ಬಳಕೆ ಮಾಡುತ್ತಿದ್ದಾರೆ ಇದರಿಂದ ರೈತರಿಗೆ ಯಾವುದೇ ಲಾಭವಿಲ್ಲ ಬಣ್ಣ ತಯಾರಿಕೆಗೆ ಮಾರಾಟ ಮಾಡಿದರೆ ರೈತರು ಎರಡರಿಂದ ಮೂರು ಪಟ್ಟು ಆದಾಯ ಗಳಿಸಬಹುದು ಎಂದರು.
ಶಿವಮೊಗ್ಗ ಜಿಲ್ಲೆ ಹೆಗ್ಗೋಡಿ ಎಲ್ಲಿರುವ ಪ್ರಸನ್ನ ಅವರ ಚರಕ ಸಂಸ್ಥೆಯವರು ಎರಡು ದಶಕಗಳಿಂದ ತೊಗರಿನಿಂದ ನೈಸರ್ಗಿಕ ಬಣ್ಣ ತಯಾರಿಸಿ ಅದನ್ನು ವಸ್ತ್ರೋದ್ಯಮದಲ್ಲಿ ವ್ಯಾಪಕವಾಗಿ ಬಳಸುತ್ತಿದ್ದಾರೆ ಜಗತ್ತಿನ ಪ್ರಸಿದ್ಧ 50 ವಸ್ತ್ರ ಉತ್ಪಾದನಾ ಸಂಸ್ಥೆಗಳು ಅಡಿಕೆ ಬಣ್ಣಬಳಕೆ ಆರಂಭಿಸಿವೆ. ರೇಷ್ಮೆ ಬಟ್ಟೆಗೂ ಇದನ್ನು ಬಳಸಲಾಗುತ್ತಿದೆ. ತಮಿಳುನಾಡು ಮತ್ತು ಚೆನ್ನಪಟ್ಟಣದ ಗೊಂಬೆ ತಯಾರಕರಾದ ವೆಂಕಟೇಶ್ ಅವರು ಗೊಂಬೆಗಳಿಗೆ ಈ ಬಣ್ಣ ಬಳಸಲು ಮುಂದಾಗಿದ್ದಾರೆ. ಇದು ಆಶಾದಾಯಕ ಬೆಳವಣಿಗೆ ಎಂಬುದು ಅಡಿಕೆ ತಜ್ಞ ಶ್ರೀ ಪಡ್ರೆ ಅವರ ವಿವರಣೆ.
ಅಡಿಕೆಯಿಂದ ಬಣ್ಣ ತಯಾರಾಗುತ್ತದೆ ಎಂಬುದು ಅಡಿಕೆ ಬೆಳೆಯುವ ಶೇಕಡ 80ರಷ್ಟು ರೈತರಿಗೆ ಗೊತ್ತಿಲ್ಲ. ಅಡಿಕೆ ತೊಗರು ನೈಸರ್ಗಿಕ ಬಣ್ಣವಾಗಿ ಬಳಸಬಹುದು ಎಂಬುದು ಬಹುಪಾಲು ವಸ್ತ್ರೋದ್ಯಮಿಗಳಿಗೆ ಅರಿವಿಗೆ ಬಂದಿಲ್ಲ. ಈಗ ವರ್ಷಕ್ಕೆ ಅಂದಾಜು ಒಂದು ಲಕ್ಷ ಲೀಟರ್ ಟಗರು ಉತ್ಪಾದನೆ ಆಗುತ್ತಿದ್ದು ವ್ಯವಸ್ಥಿತವಾಗಿ ಮಾಡಿದರೆ 4 ಲಕ್ಷ ಲೀಟರ್ ವರೆಗೆ ಉತ್ಪಾದಿಸುವ ಅವಕಾಶ ಇದೆ ಚಗರು ಸಂಸ್ಕರಣೆ ಮತ್ತು ಅದರಿಂದ ಉತ್ಕೃಷ್ಟ ಗುಣಮಟ್ಟದ ನೈಸರ್ಗಿಕ ಬಣ್ಣ ತಯಾರಿಕೆಯ ಬಗ್ಗೆ ಇನ್ನಷ್ಟು ಸಂಶೋಧನೆ ನಡೆಯಬೇಕು. ಅದಕ್ಕೆ ರೈತರನ್ನು ಅನಿಗೊಳಿಸಿದರೆ ಅಡಿಕೆಯ ತೊಗರಿನಿಂದಲೂ ರೈತರು ಹೆಚ್ಚಿನ ಆದಾಯ ಗಳಿಸುವ, ಚೊಗರೇ ಮುಖ್ಯ ಉತ್ಪನ್ನ ವಾಗುವ ಅವಕಾಶ ಇದೆ ಎನ್ನುವುದು ಅವರ ವಿಶ್ವಾಸ.
ಮಲೆನಾಡಿನಲ್ಲಿ ತಂಪು ವಾತಾವರಣದ ಪ್ರದೇಶದಲ್ಲಿ ಬೆಳೆಯುವ ಕೆಂಪಡಿಕೆಯಿಂದ ಪೊಗರು ಹೆಚ್ಚು ಉತ್ಪಾದನೆಯಾಗುತ್ತಿದೆ.ದ್ರವರೂಪದಲ್
ಅಚ್ಚು ಹಾಕುವಲ್ಲಿಯೂ ಅಚ್ಚುಮೆಚ್ಚು
ನೂಲನ್ನು ಬಣ್ಣದಲ್ಲಿ ಅದ್ದುವ ವಿಧಾನಕ್ಕೆ ಅಡಿಕೆ ಬಣ್ಣ ಬಳಸುವ ವಿಧಾನ ಜನಪ್ರಿಯವಾಗಿದೆ. ಅಡಿಕೆಯಿಂದ ನೈಸರ್ಗಿಕ ಬಣ್ಣ ತಯಾರಿಸಿ ವಸ್ತ್ರೋದ್ಯಮಕ್ಕೆ ಬಳಸುವ ವಿಧಾನದ ಕುರಿತು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ 1996 ರಲ್ಲಿ ಡಾಕ್ಟರ್ ಗೀತಾ ಮಹಾಲೆ ಅವರು ಸಂಶೋಧನೆ ನಡೆಸಿದರು ಅಚ್ಚು ಹಾಕುವ ವಿಧಾನದಲ್ಲಿಯೂ ಈ ಬಣ್ಣಬಳಕೆಯಾಗುತ್ತಿರುವುದು ಹೊಸ ಬೆಳವಣಿಗೆ.
ಅಡಿಕೆಯ ಚೊಗರಿನ ದ್ರವರೂಪದ ಬಣ್ಣ ಬಳಸಿ ಬಟ್ಟೆಗೆ ಹಚ್ಚು ಹಾಕುವ ಪ್ರಯೋಗವನ್ನ ನಾವು ಆರಂಭಿಸಿದ್ದೇವೆ ಎಂದು ಗದಗ ಜಿಲ್ಲೆಯ ಹುಲಕೋಟಿಯ ರೂರಲ್ ಇಂಜಿನಿಯರಿಂಗ್ ಕಾಲೇಜಿನ ಟೆಕ್ಸ್ಟೈಲ್ ತಂತ್ರಜ್ಞಾನ ವಿಭಾಗ ಮುಖ್ಯಸ್ಥ ಪ್ರೊಫೆಸರ್ ಸೋಮನಗೌಡ ತಿಳಿಸಿದರು.
ಏನಿದು ಚೊಗರು?
ಎರಡು ವಿಧ ಒಂದು ಚಾಲಿ ಅಡಿಕೆ ಅಂದರೆ ಬಿಳಿ ಅಡಿಕೆ ಇದನ್ನು ಮರದಲ್ಲಿ ಅಡಿಕೆ ಹಣ್ಣು ಆದಾಗ ಕೊಯ್ದು ಒಣಗಿಸಿ ಮಾರಾಟ ಮಾಡಲಾಗುತ್ತದೆ.
ಕೆಂಪಡಿಕೆ ಅಡಿಕೆ ಸುಲಿದು ಬಯಸುತ್ತಾರೆ ಕರ್ನಾಟಕದಲ್ಲಿ ಬೆಳೆಯುವ ಅಡಿಕೆಯಲ್ಲಿ ಅರ್ಧಕ್ಕಿಂತ ಹೆಚ್ಚು ಪ್ರಮಾಣ ಕೆಂಪು ಅಡಿಕೆ ಎದ್ದು ಶಿವಮೊಗ್ಗ ಉತ್ತರ ಕನ್ನಡ ಹಾಗೂ ಬಯಲು ಸೀಮೆಯಲ್ಲಿ ಇದನ್ನು ಹೆಚ್ಚು ಬಳಸಲಾಗುತ್ತಿದೆ ಎಂದು ಕರೆಯಲಾಗುತ್ತಿದೆ.
ತೊಗರನ್ನು ಸಾರ ಪೇಸ್ಟ್ ಪೌಡರ್ ರೂಪದಲ್ಲಿ ತಯಾರಿಸುವ ವಿಧಾನದಲ್ಲೂ ಆಗಲೇ ರೂಢಿಸಿಕೊಂಡಿದ್ದೇವೆ. ಅಡಿಕೆಯ ಬಣ್ಣದಿಂದ 50 ರಿಂದ 60 ಶೇಡ್ ಗಳನ್ನು ತರಬಹುದು ಎನ್ನುತ್ತಾರೆ ಡಾಕ್ಟರ್ ಗೀತಾ ಮಹಾಲೆ.
ಅಡಿಕೆ ತೊಗರಿನಲ್ಲಿ ಗೆದ್ದಲು ನಿಯಂತ್ರಕ ಅಂಶ ಇದೆ ಪ್ಲೈವುಡ್ ತಯಾರಿಕೆಗೆ ಬೇಕಿರುವ ಅಂಟನ್ನು ತಯಾರಿಸಬಹುದು ನೈಸರ್ಗಿಕ ಬಣ್ಣ ಸೇರಿದಂತೆ ಪರ್ಯಾಯ ಬಳಕೆಗೆ ಒತ್ತು ನೀಡಿ ಅಡಿಕೆಯನ್ನು ಅಪರಾಧಿಪ್ರಜ್ಞೆಯಿಂದ ಮುಕ್ತಗೊಳಿಸಬೇಕಿದೆ ಎನ್ನುತ್ತಾರೆ ಅಡಿಕೆ ಕೃಷಿ ತಜ್ಞ ಶ್ರೀ ಪಡ್ರೆ.
ರಾಜ್ಯದಲ್ಲಿ 2024ರ ಸೆಪ್ಟೆಂಬರ್ 2ರ ವರೆಗೆ 25,13,798 ಎಪಿಎಲ್(APL) ಕಾರ್ಡುಗಳಿದ್ದವು. ನವೆಂಬರ್ 16 ರಂದು 25,62,566 ಕಾರ್ಡುಗಳಿವೆ. ಅನರ್ಹ ಬಿಪಿಎಲ್ (Cancelled ration card) ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಪರಿಣಾಮ ಕೆಲವು ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡುಗಳಾಗಿ(BPL to APL) ಪರಿವರ್ತಿಸಿರುವುದರಿಂದ 48,768 ಕಾರ್ಡುಗಳು ಹೆಚ್ಚಳವಾಗಿವೆ.
ಸದ್ಯ ರಾಜ್ಯ ಸರ್ಕಾರ ಮಾನದಂಡದ ಅನ್ವಯಿಸುವ ಪ್ರಕಾರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿದೆ. ಅಲ್ಲದೇ ಇನ್ನು ಕೆಲವು ಬಿಪಿಎಲ್ ಕಾರ್ಡ್ಗಳನ್ನು ಬದಲಾವಣೆ ಮಾಡಲಾಗಿದ್ದು ಎಪಿಎಲ್ ಕಾರ್ಡ್ಗೆ ಬದಲಾವಣೆ ಮಾಡಲಾಗಿದೆ.
ಆದಾಯ ತೆರಿಗೆ ಪಾವತಿ, ವಾರ್ಷಿಕ ಆದಾಯ ಸೇರಿ, ಸರ್ಕಾರಿ ನೌಕರರು ಎಂಬ ಮಾನದಂಡ ಇಟ್ಟುಕೊಂಡು ಕಾರ್ಡ್ಗಳನ್ನ ರದ್ದು ಮಾಡಲಾಗಿದೆ. ಚಿಕ್ಕಮಗಳೂರಲ್ಲಿ 9,441 ಬಿಪಿಎಲ್ ಕಾರ್ಡ್ಗಳನ್ನ ಎಪಿಎಲ್ ಆಗಿ ಬದಲಾಯಿಸಲಾಗಿದೆ. ಇದೇ ರೀತಿ ಕೋಲಾರದಲ್ಲಿ 6,500, ಉಡುಪಿಯಲ್ಲಿ 6,422, ಬಾಗಲಕೋಟೆಯಲ್ಲಿ 6,299, ಬೆಂಗಳೂರು ಗ್ರಾಮಾಂತರ 5,973, ವಿಜಯಪುರದಲ್ಲಿ 4,359, ಮೈಸೂರು 4,221, ಹಾಸನ 3,925, ಮಂಡ್ಯದಲ್ಲಿ 2,824, ಶಿವಮೊಗ್ಗದಲ್ಲಿ 2,346, ಕಾರ್ಡ್ಗಳನ್ನ ಎಪಿಎಲ್ ಕಾರ್ಡ್ಗಳಾಗಿ ಬದಲಾವಣೆ ಮಾಡಲಾಗಿದೆ.
ಇದನ್ನೂ ಓದಿ
Ration card eligible list-2024:ಗ್ರಾಮವಾರು ಅರ್ಹ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ,ನಿಮ್ಮ ಗ್ರಾಮದ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ https://krushirushi.in/Ration-card-eligible-list-1651
ನಿಮ್ಮ ಕಾರ್ಡ್ ಎಪಿಎಲ್ ಅಥವಾ ಬಿಪಿಎಲ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
(ಸೂಚನೆ-ವೆಬ್ಸೈಟ್ ಒಪನ್ ಆಗದಿದ್ದರೆ ಸ್ವಲ್ಪ ಸಮಯದ ನಂತರ ಪುನ್ಃ ಪ್ರಯತ್ನಿಸಿ)
https://ahara.kar.nic.in/Home/EServices
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ e-status ಮೇಲೆ ಕ್ಲಿಕ್ ಮಾಡಿ
ನಂತರ DBT Status ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ select ಮಾಡಿ
ನಂತರ "Status of Ration Card/ಪಡಿತರ ಚೀಟಿ ವಿವರ"ಮೇಲೆ ಕ್ಲಿಕ್ ಮಾಡಿ
ನಂತರ without OTP Select ಮಾಡಿ
ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ರೇಷನ್ ಕಾರ್ಡ್ ನ ಸಂಪೂರ್ಣ ವಿವರ,ಇಕೆವೈಸಿ ಆಗಿರುವ ವಿವರ ಹಾಗೂ ಇಲ್ಲಿಯವರೆಗೂ ಎಷ್ಟು ಅಕ್ಕಿ ಪಡೆದಿದ್ದಿರಿ ಎಂಬ ಮಾಹಿತಿ ಸಿಗಲಿದೆ
ಇದನ್ನೂ ಓದಿ
Annabhagya amount-3 ತಿಂಗಳ ಅನ್ನಭಾಗ್ಯ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿhttps://krushirushi.in/Annabhagya-amount-1609
]]>
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ(Vetarnary department)ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.
ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
Vetarnary department schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ
ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy - https://krushirushi.in/Cattle-shed-subsidy-scheme-1630
ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಸಹಾಯಧನ ಪಡೆದು ಕೃಷಿ ಯಂತ್ರೋಪಕರಣಗಳನ್ನು (Agricultural machinery) ಖರೀದಿಸಲು ಅರ್ಹ ರೈತರಿಂದ (Farmer) ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ರೈತರಿಗೆ ಶೇ.50 ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ (Tractor Subsidy) ಟ್ರಾಕ್ಟರ್ ಖರೀದಿಗೆ ಅರ್ಜಿ ಆಹ್ವಾನಿಸಲಾಗಿದೆ.
2024-25ರ ಸಾಲಿನ ಕೃಷಿ ಯಾಂತ್ರೀಕರಣ(Agriculture mechanisation) ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ(agro processing) ಮಿನಿ ಟ್ರ್ಯಾಕ್ಟರ್(Mini tractor), ಪವರ್ ಟಿಲ್ಲರ್(power tiller), ರೋಟೋವೇಟರ್(Rotovator), ಕಳೆ ಕೊಚ್ಚುವ ಯಂತ್ರಗಳು(brush cutter), ಪವರ್ ವೀಡರ್(Power weeder) , ಪವರ್ ಸ್ಪ್ರೇಯರ್ಸ್(power sprayer), ಡೀಸೆಲ್ ಪಂಪ್ಸೆಟ್(Diseal pumpset), ಪ್ಲೋರ್ಮಿಲ್(flour mill), ಯಂತ್ರ ಚಾಲಿತ ಮೋಟೋಕಾರ್ಟ್(Motocarp), ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು(oil mill) ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು(Hi tech harvester hub) ಹಾಗೂ ತುಂತುರು ನೀರಾವರಿ(Sprinkler) ಯೋಜನೆಯಡಿಯಲ್ಲಿ ಶೇ.90ರ ರಿಯಾಯ್ತಿ ದರದಲ್ಲಿ ತುಂತುರು ನೀರಾವರಿ ಘಟಕ (ಹೆಚ್ಡಿಪಿಇ ಪೈಪ್ಸ್) ವಿತರಿಸಲಾಗುತ್ತಿದೆ.
ಆಸಕ್ತ ರೈತರು ಪಹಣಿ(ಆರ್ಟಿಸಿ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಎರಡು ಭಾವಚಿತ್ರ, ರೂ.100 ರ ಛಾಪಾ ಕಾಗದದೊಂದಿಗೆ ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಕೃಷಿ ಭಾಗ್ಯ(Krushi bhagya)ಯೋಜನೆಯಡಿಯಲ್ಲಿ ರೈತರಿಗೆ ನೀರು ಸಂಗ್ರಹಣಾ ರಚನೆ(ಕೃಷಿ ಹೊಂಡ), ಕೃಷಿ ಹೊಂಡದ(farm pond) ಸುತ್ತಲೂ ತಂತಿ ಬೇಲಿ ನಿರ್ಮಾಣ, ಹೊಂಡದಿಂದ ನೀರು ಎತ್ತಲು ಡೀಸೆಲ್/ ಸೋಲಾರ್ ಪಂಪ್ ಸೆಟ್(ಅಪ್ ಟು 10 ಹೆಚ್ಪಿ) ಮತ್ತು ಬೆಳೆಗೆ ನೀರು ಹಾಯಿಸಲು ಸೂಕ್ಷ್ಮ ನೀರಾವರಿ ಘಟಕಗಳ ಸೌಲಭ್ಯಗಳನ್ನು ಸಾಮಾನ್ಯ ರೈತರಿಗೆ ಶೇ.80ರ ಸಹಾಯಧನದಲ್ಲಿ /ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ.90ರ ಸಹಾಯಧನದಲ್ಲಿ ನೀಡಲಾಗುವುದು.
ಕೃಷಿ ಭಾಗ್ಯ ಯೋಜನೆಗೆ ರೈತರು ಒಟ್ಟು ಸಾಗುವಳಿ ಕ್ಷೇತ್ರದ ಒಂದು ಸರ್ವೇ ನಂಬರ್ನಲ್ಲಿ ಕನಿಷ್ಠ 1 ಎಕರೆ ಭೂಮಿ ಹೊಂದಿರಬೇಕು. ಹಿಂದಿನ ಸಾಲುಗಳಲ್ಲಿ ಕೃಷಿ ಭಾಗ್ಯ ಯೋಜನೆ ಅಥವಾ ಇನ್ನಾವುದೇ ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಯಾಗಿರುವ ರೈತರು ಈ ಯೋಜನೆಗೆ ಅರ್ಹತೆ ಹೊಂದಿರುವುದಿಲ್ಲ, ಇದನ್ನು ಕೆ ಕಿಸಾನ್ ಪೋರ್ಟಲ್ನಲ್ಲಿ ಪರಿಶೀಲಿಸಿ ಖಾತರಿಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>
ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ(poultry), ಕುರಿ(Sheep), ಮೇಕೆ(goat), ಹಂದಿ ಸಾಕಾಣಿಕೆ ಮತ್ತು ರಸಮೇವು(Silage) ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.
National livestock mission
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ
(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)
ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ (Kisan credit card)ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.
ಅವಶ್ಯಕ ದಾಖಲಾತಿಗಳು :-
1)ಆಧಾರ,
2)ಪಹಣಿ ಪತ್ರ
3)ಬ್ಯಾಂಕ್ಖಾತೆ ಸಂಖ್ಯೆ,
ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು
4)ಭಾವ ಚಿತ್ರ.
ಕ್ರ.ಸಂ |
ಘಟಕ |
ಸೌಲಭ್ಯಗಳ ವಿವರ |
|
ಹೈನುಗಾರಿಕೆ |
|
1 |
ಮಿಶ್ರತಳಿ ದನಗಳ ನಿರ್ವಹಣೆ (1+1) |
ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ |
|
ಆ. ಸುಧಾರಿತ ಎಮ್ಮೆಗಳ ನಿರ್ವಹಣೆ |
ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ |
|
ಕುರಿ ಸಾಕಾಣಿಕೆ |
|
2 |
ಕುರಿಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ |
|
ಕುರಿಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (10) |
ರೂ. 13,000 ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (20) |
ರೂ. 26,000 ರಂತೆ ಸಾಲ ಸೌಲಭ್ಯ |
|
ಮೇಕೆ ಸಾಕಾಣಿಕೆ |
|
3 |
ಮೇಕೆಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ |
|
ಮೇಕೆಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ |
4 |
ಹಂದಿ ಸಾಕಾಣಿಕೆ (10) |
ರೂ,60,000 ರಂತೆ ಸಾಲ ಸೌಲಭ್ಯ |
|
ಕೋಳಿ ಸಾಕಾಣಿಕೆ |
|
5 |
ಮಾಂಸದ ಕೋಳಿ ಸಾಕಾಣಿಕೆ |
2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ |
|
ಮೊಟ್ಟೆ ಕೋಳಿ ಸಾಕಾಣಿಕೆ |
1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ |
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.
Vetarnary department subsidy schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಹಾಲು ಉತ್ಪಾದಕರಿಗೆ ಪ್ರೋತ್ಸಾಹ(Milk incentive)
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ಲಸಿಕಾ ಕಾರ್ಯಕ್ರಮ(Vaccination program)
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ(Back yard poultry)
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>
ನಿಮಗೆ ಗೊತ್ತಿಲ್ಲದೇ ಹಾಗೆ ನಿಮ್ಮ ಪಹಣಿಯಲ್ಲಿ(RTC) ಅವರ ಹೆಸರು ಹಾಕಿದ್ದಾರೆ ಎಂಬುದನ್ನು ರೈತರು ಒಮ್ಮೆ ಪರಿಶೀಲಿಸಿ. ಈ ಕೆಲಸವನ್ನು ಪ್ರತಿಯೊಂದು ರೈತರು ಆದಷ್ಟು ಬೇಗ ಮಾಡಬೇಕು. ಈ ಮಾಹಿತಿ ನಿಮ್ಮ ಕಾನೂನು ಹೋರಾಟಕ್ಕೆ ನಿರ್ಣಾಯಕ ಹಾಗೂ ಸಾಕ್ಷ್ಯ ಸಂಗ್ರಹಿಸಲು ಅಗತ್ಯವಾದ ಪ್ರಕ್ರಿಯೆ ಆಗಿರುತ್ತದೆ. ಆದ್ದರಿಂದ ಇಂದೇ ನಿಮ್ಮ ಪಹಣಿಯ(Uthara) ಕಾಪಿ ಪಡೆದು ಪರಿಶೀಲನೆ ಮಾಡಿ, ಒಂದು ವೇಳೆ ಯಾರಾದರು ಎಂದು ನಮೂದಿಸಲಾಗಿದ್ದಲ್ಲಿ ಕೂಡಲೇ ಜಮೀನಿನ ದಾಖಲೆ(Land records) ಹಾಗೂ ಪಹಣಿಯೊಂದಿಗೆ ತಹಶಿಲ್ದಾರ್ ಅಥವಾ ಜಿಲ್ಲಾದಿಕಾರಿಗಳಿಗೆ ದೂರು ಸಲ್ಲಿಸಿ
ನಿಮ್ಮ ಪಹಣೆಯಲ್ಲಿ(pahani) ಯಾರ ಹೆಸರಿದೆ ಎಂದು ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://landrecords.karnataka.gov.in/Service2/
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಪಹಣೆಯಲ್ಲಿ ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
Bele sala-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ-crop loan status - https://krushirushi.in/Bele-sala-crop-loan-status-1638
]]>ನೇರ ನಗದು ವರ್ಗಾವಣೆ ಮೂಲಕ ರಾಜ್ಯದ ರೈತರಿಗೆ 2100 ಕೋಟಿ ರೂ ಬೆಳೆ ವಿಮೆ ಪಾವತಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಹೇಳಿದೆ.
ಜಿಕೆವಿಕೆ ಆವರಣದಲ್ಲಿ ಬೆಂಗಳೂರು ಕೃಷಿ ವಿವಿ ವತಿಯಿಂದ ಏರ್ಪಡಿಸಲಾಗಿದ್ದ ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು 2,100 ಕೋಟಿ ರೂಪಾಯಿ ಬೆಳೆ ವಿಮೆ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ರೈತರಿಗೆ ಭರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್(Survey number) ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.
ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ(Bele sala) ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.
ಸಾಲ(crop loan status)ವಿವರ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು
https://landrecords.karnataka.gov.in/Service2/
ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ.
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಇದನ್ನೂ ಓದಿ
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427
ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್(Survey number) ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ(Survey number) ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ(crop loan) ಪಡೆಯಲಾಗಿದೆ. ಎಂಬ ಮಾಹಿತಿ ಇರುತ್ತದೆ.
ಇದನ್ನೂ ಓದಿ
Waqf board property-ಸರ್ವೆ ನಂಬರ್ ಹಾಕಿ ನಿಮ್ಮ ಪಹಣೆ ನಿಮ್ಮ ಹೆಸರಿನಲ್ಲಿದೆಯೊ ಅಥವಾ ಬೇರೆಯವರ ಹೆಸರಿನಲ್ಲಿದೆಯೊ ಚೆಕ್ ಮಾಡಿಕೊಳ್ಳಿ - https://krushirushi.in/Waqf-board-property-1672
ಎಲ್ಲಾ ರೈತಬಾಂಧವರಿಗೂ Krushi Rushi ವೆಬ್ಸೈಟ್ ಗೆ ಮತ್ತೆ ಸ್ವಾಗತ, ಈ ಲೇಖನದಲ್ಲಿ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ಹೇಗೆ ಚೆಕ್ ಮಾಡಬೇಕು ಎಂದು ತಿಳಿಸಲಾಗಿದೆ.
ಕರ್ನಾಟಕ ಸರ್ಕಾರದಿಂದ 2024-25 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (Pradan mantri fasal bheema yojana) ಯೋಜನೆಯಡಿ ಬೆಳೆವಿಮೆ ಅರ್ಜಿ ಆಹ್ವಾನಿಸಲಾಗಿದ್ದು,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ ಹಿಂಗಾರು ಹಂಗಾಮಿನ ಹವಾಮಾನ ವೈಪರಿತ್ಯದಿಂದ ಆಗುವ ಬೆಳೆಹಾನಿ ನಷ್ಟದಿಂದ ಪಾರಾಗಿ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Rabi"(ಹಿಂಗಾರು)
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ
ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ(Hingaru belevime last date) ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ (Rabi crop insurance last date) ತಿಳಿದುಕೊಂಡು ಬೆಳೆವಿಮೆ ಕಟ್ಟಿ
ರೈತ ಭಾಂದವರೆ ಈ ಮಾಹಿತಿ ನಿಮಗೆ ಉಪಯೋಗವಾಗಿದ್ದರೆ, ವಾಟ್ಸಪ್ ಮೂಲಕ ಇತರರಿಗೂ ಶೇರ್ ಮಾಡಿ
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ಕೃಷಿ ಪರಿಕರಗಳನ್ನು ಆರ್ಡರ್ ಮಾಡಿದರೆ,ನಿಮ್ಮ ಮನೆ ಬಾಗಿಲಿಗೆ ಕಳಿಸಲಿದ್ದೇವೆ
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/PariharaPayment/
ನಂತರ "ಆಧಾರ್ ಸಂಖ್ಯೆ/Aadhar number" ಮೇಲೆ ಕ್ಲಿಕ್ ಮಾಡಿ
ನಂತರ calamity type "Flood" ಎಂದು ಋುತು "2024-25" ಎಂದು select ಮಾಡಿ
ನಂತರ ನಿಮ್ಮ ಆಧಾರ್ ನಂಬರ್/Aadhar number ಹಾಕಿ,captch code ಹಾಕಿ,ವಿವರಗಳನ್ನು ಪಡೆಯಲು/Fetch details ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪರಿಹಾರ ಹಣ ಜಮಾ ಸ್ಟೇಟಸ್ ತಿಳಿಯಲಿದೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್(Gram one online application) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಟಾನಗೊಳಿಸುತ್ತಿದ್ದು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆಸಕ್ತಿವುಳ್ಳವರು ಅರ್ಜಿಗಳನ್ನು https://www.karnatakaone.gov.in/Public/GramOneFrachiseeTerms ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು ಹಾಗೂ ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ ಅರ್ಜಿ ಸಲ್ಲಿಸಿ
https://youtu.be/eX2iQzi62sY?si=ianjp3DGKa_6gFz_
ಗ್ರಾಮಓನ್ ನಲ್ಲಿ ಸಿಗುವ ಸೇವೆಗಳು ಹಾಗೂ ಅದಕ್ಕೆ ಬೇಕಾದ ದಾಖಲೆಗಳ ಪಟ್ಟಿಯನ್ನು ಈ ಕೆಳಗಿನ PDF ಮೂಲಕ ಡೌನ್ಲೋಡ್ ಮಾಡಿಕೊಳ್ಳಿ
]]>ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ನಿಮಗೆ ಗೊತ್ತಿಲ್ಲದೇ ಹಾಗೆ ನಿಮ್ಮ ಪಹಣಿಯಲ್ಲಿ(RTC) ಅವರ ಹೆಸರು ಹಾಕಿದ್ದಾರೆ ಎಂಬುದನ್ನು ರೈತರು ಒಮ್ಮೆ ಪರಿಶೀಲಿಸಿ. ಈ ಕೆಲಸವನ್ನು ಪ್ರತಿಯೊಂದು ರೈತರು ಆದಷ್ಟು ಬೇಗ ಮಾಡಬೇಕು. ಈ ಮಾಹಿತಿ ನಿಮ್ಮ ಕಾನೂನು ಹೋರಾಟಕ್ಕೆ ನಿರ್ಣಾಯಕ ಹಾಗೂ ಸಾಕ್ಷ್ಯ ಸಂಗ್ರಹಿಸಲು ಅಗತ್ಯವಾದ ಪ್ರಕ್ರಿಯೆ ಆಗಿರುತ್ತದೆ. ಆದ್ದರಿಂದ ಇಂದೇ ನಿಮ್ಮ ಪಹಣಿಯ(Uthara) ಕಾಪಿ ಪಡೆದು ಪರಿಶೀಲನೆ ಮಾಡಿ, ಒಂದು ವೇಳೆ ಯಾರಾದರು ಎಂದು ನಮೂದಿಸಲಾಗಿದ್ದಲ್ಲಿ ಕೂಡಲೇ ಜಮೀನಿನ ದಾಖಲೆ(Land records) ಹಾಗೂ ಪಹಣಿಯೊಂದಿಗೆ ತಹಶಿಲ್ದಾರ್ ಅಥವಾ ಜಿಲ್ಲಾದಿಕಾರಿಗಳಿಗೆ ದೂರು ಸಲ್ಲಿಸಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://youtu.be/ZG-WJ9OlrTc?si=0Pb9RqHal3p3URQW
ನಿಮ್ಮ ಪಹಣೆಯಲ್ಲಿ(pahani) ಯಾರ ಹೆಸರಿದೆ ಎಂದು ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಲಿಂಕ್ ಮೋಲೆ ಕ್ಲಿಕ್ ಮಾಡಿ
https://landrecords.karnataka.gov.in/Service2/
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಪಹಣೆಯಲ್ಲಿ ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
Bele sala-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ-crop loan status - https://krushirushi.in/Bele-sala-crop-loan-status-1638
]]>
ಫ್ರುಟ್ಸ್ ನಲ್ಲಿ(FRUITS) ನೊಂದಣಿ ಮಾಡಿಕೊಳ್ಳದೇ ಇರುವ ರೈತರು ಕೂಡಲೆ ಫ್ರುಟ್ಸ್ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೆ ಫ್ರುಟ್ಸ್ನಲ್ಲಿ ನೊಂದಣಿ ಮಾಡಿಸಿಕೊಂಡವರು ಎಲ್ಲಾ ಸರ್ವೆ ನಂಬರ್(Survey number) ಗಳನ್ನು ನಿಮ್ಮ FIDಗೆ ಲಿಂಕ್ ಮಾಡಬೇಕು, ಅಂದರೆ ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 01 ಎಕರೆ ಮಾತ್ರ ನಮೂದಿಸಿರುತ್ತಾರೆ, ಅಂತಹವರಿಗೆ ಕೇವಲ 01 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ, ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ಪಹಣಿಯ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ (FRUITS) ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ(bele parihara) ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ ಪಾವತಿಯಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ (FRUITS)ನಲ್ಲಿ ನೊಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ನಿಮ್ಮ FID ಗೆ ಎಷ್ಟು ಸರ್ವೆ ನಂಬರ್ ಲಿಂಕ್ ಆಗಿದೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್(Aadhaar number) ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ password create ಮಾಡಿ
Mobile number,Create ಮಾಡಿದ password ಹಾಗೂ captcha code ಹಾಕಿ ಲಾಗಿನ್ ಮಾಡಿ
ನಂತರ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, Search ಮೇಲೆ ಕ್ಲಿಕ್ ಮಾಡಿ
ನಂತರ Registration status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ FIDಗೆ ಯಾವ ಯಾವ ಸರ್ವೆ ನಂಬರ್(Survey number) ಗಳನ್ನು ಸೇರಿಸಲಾಗಿದೆ ಎಂದು ತೋರಿಸುತ್ತದೆ
ನಿಮ್ಮ ಸರ್ವೆ ನಂಬರ್(Survey number) ಗಳು ನಿಮ್ಮ FIDಯಲ್ಲಿ ಸೇರಿಸದಿದ್ದರೆ,ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಬೇಟಿ ಕೊಟ್ಟು ನಿಮ್ಮ ಎಲ್ಲಾ ಸರ್ವೆ ನಂಬರ್ ಗಳನ್ನು ಸೇರಿಸಿಕೊಳ್ಳಿ.
ರಾಜ್ಯ ಸರ್ಕಾರವು ಸಾಮಾನ್ಯ ಜನರ ಮತ್ತು ಕೂಲಿ ಕಾರ್ಮಿಕರ ಏಳಿಗೆಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು (MGNAREGA)ಜಾರಿಗೆ ತಂದಿದ್ದಾರೆ.
ಮಹಾತ್ಮ ಗಾಂಧಿ ನರೇಗಾ ಯೋಜನೆ(NAREGA) ಅಡಿ ವೈಯಕ್ತಿಕ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಯ ಈ ಕೆಳಕಂಡ ವರ್ಗಗಳಲ್ಲಿ ಯಾವುದಾದರೂ ಒಂದು ವರ್ಗದಲ್ಲಿ ಅರ್ಹರಾಗಿರತಕ್ಕದ್ದು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ
ಅಲೆಮಾರಿ ಬುಡಕಟ್ಟುಗಳು
ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು
ಮಹಿಳಾ ಪ್ರಧಾನ ಕುಟುಂಬಗಳು
ವಿಕಲಚೇತನ ಕುಟುಂಬಗಳು
ಭೂ ಸುಧಾರಣಾ ಫಲಾನುಭವಿಗಳು
ವಸತಿ ಯೋಜನೆಗಳ ಫಲಾನುಭವಿಗಳು
ಅರಣ್ಯ ಹಕ್ಕು ಕಾಯಿದೆ 2006ರ ಫಲಾನುಭವಿಗಳು
ಸಣ್ಣ ಮತ್ತು ಅತಿ ಸಣ್ಣ ರೈತರು
ಫಲಾನುಭವಿಯು ವೈಯಕ್ತಿಕ ಸೌಲಭ್ಯ ಪಡೆಯಲು
ಫಲಾನುಭವಿಯು ಕಡ್ಡಾಯವಾಗಿ ನರೇಗಾ ಯೋಜನೆಯ ಜಾಬ್ ಕಾರ್ಡ್(Job card) ಹೊಂದಿರಬೇಕು
ಫಲಾನುಭವಿಗೆ ನೀಡಲಾದ ವೈಯಕ್ತಿಕ ಕಾಮಗಾರಿಯಲ್ಲಿ ಆತನ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಾದರು ಕೆಲಸ ನಿರ್ವಹಿಸಬೇಕು
ನರೇಗಾ ಯೋಜನೆಯಡಿ ಫಲಾನುಭವಿಕೆ ನೀಡಬಹುದಾದ ವಯಕ್ತಿಕ ಕಾಮಗಾರಿಗಳ ಗರಿಷ್ಠ ಮಟ್ಟದ ಮಿತಿಯನ್ನು 2 ಲಕ್ಷಗಳಿಗೆ ನಿಗದಿಪಡಿಸಿ ಸದರಿ ಗರಿಷ್ಠ ಮೊತ್ತದ ಮಿತಿಯನ್ನು ಹೆಚ್ಚಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗಿರುತ್ತದೆ
ಯೋಜನೆ ಅಡಿ ನೊಂದಾಯಿತವಾದ ಒಂದು ವರ್ಷ ಕುಟುಂಬವು ತನ್ನ ಜೀವಿತಾವಧಿಯಲ್ಲಿ ಗರಿಷ್ಠ ಎರಡು ವರೆ ಲಕ್ಷದ ಗಳವರೆಗೆ ಯೋಜನೆ ಅಡಿ ನೀಡಲಾಗುವ ವೈಯಕ್ತಿಕ ಕಾಮಗಾರಿಗಳನ್ನು ಪಡೆದುಕೊಳ್ಳಬಹುದಾಗಿದೆ
ನರೇಗಾ ಯೋಜನೆಯಡಿ ಕೃಷಿಹೊಂಡ ನಿರ್ಮಾಣ
ನರೇಗಾ ಯೋಜನೆ ಅಡಿ ಅರ್ಹ ಫಲಾನುಭವಿಯು ಯೋಜನೆ ಅಡಿ ನಿರ್ಮಿಸಿಕೊಂಡ ಕೃಷಿಹೊಂಡ ಕಾಮಗಾರಿಯನ್ನು ಮುಂದಿನ ಐದು ವರ್ಷಗಳವರೆಗೆ ಮುಚ್ಚತಕ್ಕದ್ದಲ್ಲ.
ಒಂದು ವೇಳೆ ಫಲಾನುಭವಿಯು ಕೃಷಿ ಹೊಂಡವನ್ನು ಮುಚ್ಚಿದ್ದಲ್ಲಿ ಕೃಷಿಹೊಂಡ ನಿರ್ಮಾಣಕ್ಕಾಗಿ ತಗಲಿದ ವೆಚ್ಚ ಹಾಗೂ ಶೇಕಡ 18ರಷ್ಟು ಬಡ್ಡಿ ಸೇರಿ ಸರ್ಕಾರಕ್ಕೆ ಬರಣ ಮಾಡತಕ್ಕದ್ದು
ಕೃಷಿ ಹೊಂಡ ನಿರ್ಮಾಣ ಕಾಮಗಾರಿಯನ್ನು ಅನುಷ್ಠಾನಗೊಳಿಸುವ ಮುಂಚೆ ಫಲಾನುಭವಿಗಳಿಂದ ಮುಚ್ಚಳಿಕೆ ಪತ್ರವನ್ನು ಕಡ್ಡಾಯವಾಗಿ ಪಡೆಯತಕ್ಕದ್ದು
ಕೃಷಿ ಹೊಂಡ ಕಾಮಗಾರಿಗಳ ಕ್ರಿಯಾಯೋಜನೆಯನ್ನು ಅನುಮೋದನೆಗಾಗಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸುವಾಗ ಮುತ್ತಳಿಕೆ ಪತ್ರದ ಪ್ರತಿಯನ್ನು ಲಗತ್ತಿಸುವುದು
ಕಾಮಗಾರಿಗಳ ಆಯ್ಕೆ ಮಾಡುವಾಗ ತಾಂತ್ರಿಕವಾಗಿ ಸೈಟ್ ಫೀಸಿಬಿಲಿಟಿ ಇರುವುದನ್ನ ಖಚಿತಪಡಿಸಿಕೊಳ್ಳುವುದು
ಕೃಷಿಹೊಂಡ ಕಾಮಗಾರಿಯ ಅನುಮೋದನೆಯಾದ ಆರ್ಥಿಕ ವರ್ಷದಲ್ಲಿಯೇ ಕಡ್ಡಾಯವಾಗಿ ಪೂರ್ಣಗೊಳಿಸುವುದು
ಅನುಷ್ಠಾನಗೊಳಿಸುವಾಗ ಮೂರು ಹಂತದ Geo Tag ಮಾಡುವ ಪ್ರಕ್ರಿಯೆಯನ್ನು ನಿಗದಿ ಅವಧಿಯೊಳಗೆ ಪೂರ್ಣಗೊಳಿಸುವುದು ಕಡ್ಡಾಯವಾಗಿರುತ್ತದೆ
ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಸಿಟಿಜನ್ ಇನ್ಫಾರ್ಮಶನ್ ಬೋರ್ಡ್ ಅಳವಡಿಸತಕ್ಕದ್ದು.
ದನದ ಶೆಡ್ ನಿರ್ಮಾಣಕ್ಕೆ 57,000 ಸಹಾಯಧನ
ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ದನಗಳ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ಯ ಇಲಾಖೆಗಳು ಮೊದಲು ನೀಡುತ್ತಿರುವ ಸಹಾಯಧನವನ್ನು ಹೆಚ್ಚಳ ಮಾಡಿ, ರಾಜ್ಯದ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿಯನ್ನು ನೀಡಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಅಂದರೆ 2022ರ ಸಾಲಿನ ಏಪ್ರಿಲ್ 1 ರಿಂದ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೂಲಿ ಕಾರ್ಮಿಕರ ಮೊತ್ತವನ್ನು ರೂಪಾಯಿ 289ರೂ.ನಿಂದ ರೂಪಾಯಿ 309ರೂ.ವರೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಮಿಕರ ಕೂಲಿ ಮೊತ್ತವನ್ನು ಹೆಚ್ಚಿಸಿ ಕೂಲಿಕಾರರಿಗೆ ಸಿಹಿಸುದ್ದಿ ನೀಡಿದೆ.
ರೈತರಿಗೆ ದನದ ಕೊಟ್ಟಿಗೆ(Danada shed) ಅಥವಾ ಶೆಡ್ ನಿರ್ಮಾಣದ ಬಗ್ಗೆ ಅಂದರೆ ಯಾರು ಹಸುಗಳು ಅಥವಾ ಎಮ್ಮೆಗಳನ್ನು ಸಾಕಿದ್ದಾರೋ ಅಥವಾ ನಿಮ್ಮ ಮನೆಯಲ್ಲಿ ಅಥವಾ ನಿಮ್ಮ ಮನೆ ಹಿಂದೆ ಇರುವ ಜಾಗದಲ್ಲಿ ಅಥವಾ ಎಲ್ಲಿ ನಿಮಗೆ ಸಂತ ಜಾಗವಿದೆಯೋ ಅಲ್ಲಿ ನೀವು ದನದ ಕೊಟ್ಟಿಗೆ ಅಥವಾ ದನದ ಶೆಡ್ ಅನ್ನು ನಿರ್ಮಾಣ ಮಾಡಲು ಪಂಚಾಯಿತಿ ವತಿಯಿಂದ ರೈತರಿಗೆ ಮತ್ತು ಆಸಕ್ತರಿಗೆ ಸಹಾಯಧನ ನೀಡಲಾಗುತ್ತದೆ.
ಸಾಮಾನ್ಯ ವರ್ಗದ ಜನರಿಗೆ ಸರಿ ಸುಮಾರು ರೂಪಾಯಿ 20,000 ರೂಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ವತಿಯಿಂದ ಅದನ್ನು ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸುಮಾರು 43,000ರೂಗಳ ಸಹಾಯಧನವನ್ನು ಈ ರಾಜ್ಯ ಸರ್ಕಾರದ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಪಂಚಾಯಿತಿ ಕಡೆಯಿಂದ ನೀಡುವ ಈ ಒಟ್ಟು ಮೊತ್ತದಲ್ಲಿ ಅಂದರೆ ಈ 43,000ರೂ.ಗಳಲ್ಲಿ, ಫಲಾನುಭವಿ ರೈತರಿಗೆ ಸುಮಾರು 8,996ರೂ.ಗಳನ್ನು ಅವರ ಕೂಲಿ ಮೊತ್ತವಾಗಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಈ ಸಹಾಯಧನವನ್ನು ನರೇಗಾ ಕಾರ್ಡ್ ಹೊಂದಿರುವ ರೈತರಿಗೆ ಅಥವಾ ಅರ್ಜಿದಾರರಿಗೆ ಮಾತ್ರ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಶೆಡ್ ಅಥವಾ ದನದ ಕೊಟ್ಟಿಗೆ ನಿರ್ಮಾಣ ಮಾಡಲಿಕ್ಕೆ ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಉಳಿದ ಮೊತ್ತವನ್ನು ಅಂದರೆ ಉಳಿದ 34,000ರೂ.ಗಳನ್ನು ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಾಮಾನ್ಯ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಇದರ ಅರ್ಧ ಮೊತ್ತ ಸಿಗುತ್ತಿತ್ತು. ಅಂದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ರೂಪಾಯಿ 8,996ರೂ.ಗಳ ಕೂಲಿಯನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಲ್ಲರಿಗೂ ಸಮಾನವಾದ ಕೂಲಿಯನ್ನು ನೀಡಲಾಗುತ್ತದೆ.
ಆದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಿಗುವ ಉಳಿದ 34,000ರೂ.ಗಳ ಹಣದಲ್ಲಿ ಸಾಮಾನ್ಯ್ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಈ 34,000ರೂ.ಗಳಲ್ಲಿ ಕೇವಲ ಅರ್ಧ ಮೊತ್ತವನ್ನು ನೀಡಲಾಗುತ್ತಿತ್ತು.
ಅಂದರೆ ಸರಿಸುಮಾರು 20,000ರೂ.ಗಳನ್ನು ಸಾಮಾನ್ಯ ವರ್ಗದವರಿಗೆ ಅಥವಾ ಜನರಲ್ ಕೆಟಗರಿಯವರಿಗೆ ಈ ಯೋಜನೆಯ ಅಡಿಯಲ್ಲಿ ಪಂಚಾಯಿತಿಯ ಕಡೆಯಿಂದ ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭ್ಯರ್ಥಿಗಳಿಗೆ ರೂಪಾಯಿ 43,000ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ.
ರೈತರು ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ದನದ ಕೊಟ್ಟಿಗೆ ಅಥವಾ ಶೆಡ್ ನ ಅಳತೆ ಎಷ್ಟಿರಬೇಕು?
• ರೈತರು ಈ ಯೋಜಯಡಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ಕಟ್ಟುವ ದನದ ಕೊಟ್ಟಿಗೆ ಅಥವಾ ಶೆಡ್ 5 ಫೀಟ್ ಎತ್ತರದ ಗೋಡೆಯನ್ನು ಹೊಂದಿರಬೇಕು.
• ಹಸುಗಳಿಗೆ ಮೇವು ಹಾಗೂ ನೀರಿನ ವ್ಯವಸ್ಥೆಗಾಗಿ ಗೋದಲಿಯನ್ನು ನಿರ್ಮಾಣ ಮಾಡಿರಬೇಕು.
• ಜಾನುವಾರುಗಳಿಗೆ ಶೆಡ್ ನಲ್ಲಿ ಗಾಳಿ ಮತ್ತು ಬೆಳಕು ಆಡಲು ಕೊಟ್ಟಿಗೆಗೆ ಶೆಡ್ ಶೀಟ್ಗಳನ್ನು ಹಾಕಬೇಕು.
•ಇವೆಲ್ಲವುದರ ಜೊತೆಗೆ ನೀವು ಈ ಯೋಜನೆಯಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನರೇಗಾ ನಾಮಫಲಕವನ್ನು ಕಡ್ಡಾಯವಾಗಿ ಹಾಕಬೇಕಾಗಿರುತ್ತದೆ.
• ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಿಕೊಳ್ಳಲು ರೈತರು ಮೊದಲನೆಯದಾಗಿ ತಮಗೆ ಸಂಬಂಧಪಟ್ಟ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ. ಅಂದರೆ ಈ ಯೋಜನೆಯಡಿಯಲ್ಲಿ ಯಾರ್ಯಾರು ಸಹಾಯ ಧನವನ್ನು ಪಡೆಯಬೇಕೆಂದು ಕೊಂಡಿದ್ದರೋ ಅಥವಾ ಈ ಯೋಜನೆಯ ಫಲಾನುಭವಿಯಾಗಲು ಬಯಸುವಂತಹ ಅರ್ಜಿದಾರರು ತಮ್ಮ ಹೆಸರನ್ನು ನಿಮಗೆ ಹತ್ತಿರವಿರುವ ಅಥವಾ ನಿಮಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಬೇಕಾಗಿರುತ್ತದೆ.
• ಪ್ರತಿವರ್ಷ ಜಾರಿಗೊಳಿಸುವ ಈ ಯೋಜನೆಯಲ್ಲಿ ನಿಮ್ಮ ಹೆಸರನ್ನು ಸೇರಿಸಬೇಕು. ಅಂದಾಗ ಮಾತ್ರ ನೀವು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
• ಇದಾದನಂತರ ಸಂಬಂಧಪಟ್ಟ ಪಂಚಾಯಿತಿಯ ಅಧಿಕಾರಿಗಳು ಬಂದು ನೀವು ದನದ ಕೊಟ್ಟಿಗೆ ಅಥವಾ ಶೆಡ್ಕಟ್ಟಬೇಕೆಂದು ಕೊಂಡಿರುವ ಖಾಲಿ ಜಾಗಕ್ಕೆ ಬಂದು ಭೇಟಿ ನೀಡಿ, ಆ ಜಾಗದ GPS ಅನ್ನು ಮಾಡಿ, ಆ ಜಾಗದ ಸರ್ವೆ ಮಾಡಿ ನಿಮಗೆ ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಅನುಮತಿಯನ್ನು ನೀಡುತ್ತಾರೆ.
• ಅದಾದ ನಂತರ ನೀವು ಕೊಟ್ಟಿಗೆ ಕಟ್ಟಲು ಬೇಕಾಗುವ ಸಾಮಗ್ರಿಗಳನ್ನು ಪಂಚಾಯಿತಿ ನೀಡುವ ಸಹಾಯಧನದಲ್ಲಿ ತಂದು ನಿಮ್ಮ ಕೊಟ್ಟಿಗೆ ಕಟ್ಟುವ ಕೆಲಸವನ್ನು ಪ್ರಾರಂಭಿಸಬಹುದು.
• ನೀವು ಕೊಟ್ಟಿಗೆ ಕಟ್ಟುವ ಕೆಲಸವನ್ನು ಶುರು ಮಾಡುವ ಮೊದಲು ಒಂದು ಕಲ್ಲಿನ ಬೋರ್ಡನ್ನು ಅಂದರೆ ನರೇಗಾ ನಾಮಫಲಕವನ್ನು ಬರೆಸಬೇಕಾಗಿರುತ್ತದೆ.
ಈ ಬೋರ್ಡ್ ನೀವು ಯಾವ ಯೋಜನೆಯಡಿ ಈ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದೀರಿ.ಎಂಬುದನ್
ಇದರಲ್ಲಿ ನೀವು ಯೋಜನೆ ಪಡೆಯುತ್ತಿರುವ ವರ್ಷ, ಗ್ರಾಮ ಪಂಚಾಯಿತಿ ಹೆಸರು, ತಾಲೂಕು ಮತ್ತು ಜಿಲ್ಲೆಯನ್ನು ಒಳಗೊಂಡಿರುತ್ತದೆ.
ಈ ನರೇಗಾ ನಾಮಫಲಕಾದಲ್ಲಿ ಫಲಾನುಭವಿಯ ಹೆಸರು ನಮೂದಿಸಲಾಗಿರುತ್ತದೆ.
ಹಾಗೂ ಅದೇ ರೀತಿ ಫಲಾನುಭವಿಯು ಈ ನರೇಗಾ ಉದ್ಯೋಗ ಖಾತರಿ ಯೋಜನೆಯನ್ನು ಪಡೆದುಕೊಳ್ಳುತ್ತಿರುವ ಕಾಮಗಾರಿ ಸಂಕೇತವನ್ನು ಒಳಗೊಂಡಿರುತ್ತದೆ.
ಈ ನರೇಗಾ ನಾಮಫಕದಲ್ಲಿ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಒಟ್ಟು ಬಿಡುಗಡೆಯಾದ ಮೊತ್ತ, ಎಷ್ಟು ಬಿಡುಗಡೆಯಾಗಿದೆ? ಯಾವುದಕ್ಕೆಲ್ಲ ಬಿಡುಗಡೆಯಾಗಿದೆ? ಖರ್ಚಾದ ಮೊತ್ತ ಮತ್ತು ಕೊಟ್ಟಿಗೆ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳ ಮೊತ್ತ, ಎಲ್ಲವನ್ನು ಒಳಗೊಂಡಿರುತ್ತದೆ.
ನರೇಗಾ ಯೋಜನೆಯ ಅಡಿಯಲ್ಲಿ ಸಹಾಯಧನ ಪಡೆದುಕೊಳ್ಳಲು ದನದ ಕೊಟ್ಟಿಗೆ ಹೇಗಿರಬೇಕು? ಅದರ ಉದ್ದ ಮತ್ತು ಅಳತೆಗಳು ಎಷ್ಟಿರಬೇಕು?
* ದನದ ಕೊಟ್ಟಿಗೆಯ ಅಗಲವು ಸುಮಾರು ನಾಲ್ಕು ಮೀಟರುಗಳಷ್ಟು ಇರಬೇಕು.
* ದನದ ಕೊಟ್ಟಿಗೆ ಅಥವಾ ಶೆಡ್ನ ಉದ್ದವು ಏಳು ಮೀಟರ್ಗಳಷ್ಟು ಇರಬೇಕು.
*ಅಂದರೆ ಸಾಮಾನ್ಯವಾಗಿ 22 ಅಡಿ ಉದ್ದ ಮತ್ತು13 ಅಡಿ ಅಗಲವನ್ನು ಹೊಂದಿರಬೇಕಾಗುತ್ತದೆ.
* ದನದ ಕೊಟ್ಟಿಗೆಯು ಕನಿಷ್ಠ ಅಗಲ ಮತ್ತು ಉದ್ದವಗಳನ್ನು ಹೊಂದಿರಬೇಕಾಗುತ್ತದೆ.
* ಇದಕ್ಕಿಂತ ಕಡಿಮೆ ಉದ್ದ ಮತ್ತು ಅಗಲಗಳ ಅಳತೆಗಳನ್ನು ಹೊಂದಿದ್ದರೆ ನಿಮಗೆ ಸಿಗುವ ಸಹಾಯಧನದಲ್ಲಿ ಮೊತ್ತವು ಕಡಿಮೆಯಾಗುತ್ತದೆ. ಅಂದರೆ ನಿಮಗೆ ಸಿಗುತ್ತಿರುವ ಸಾಮಗ್ರಿ ಮೊತ್ತದಲ್ಲಿ ಸಹಾಯಧನ ಕಡಿಮೆಯಾಗುತ್ತದೆ.
* ಇದಕ್ಕಿಂತ ಜಾಸ್ತಿ ಉದ್ದ ಮತ್ತು ಅಗಲಗಳನ್ನು ಹೊಂದಿರಬಹುದು. ಆದರೆ ಈ ಕನಿಷ್ಠ ಅಳತೆಗಳ ಕೆಳಗೆ ಅಳತೆಗಳನ್ನು ಹೊಂದಿರಬಾರದು.
* ದನದ ಕೊಟ್ಟಿಗೆ ನಿರ್ಮಾಣದ ಸಮಯದಲ್ಲಿ ದನಗಳನ್ನು ಕಟ್ಟುವ ಜಾಗದಲ್ಲಿ ನೆಲವನ್ನು ಕಾಂಕ್ರೀಟ್ ನಿಂದ ಮಾಡಿರಬೇಕಾಗಿರುತ್ತದೆ. ಯಾವುದೇ ತರದ ಚಪ್ಪಡಿ ಕಲ್ಲುಗಳನ್ನು ಮತ್ತು ಇನ್ನಿತರೆ ರಬ್ಬರ್ ಮ್ಯಾಟ್ ಅಥವಾ ನೆಲಹಾಸುಗಳನ್ನು ಬಳಸುವಂತಿಲ್ಲ. ನೀವು ನೆಲವನ್ನು ಕಾಂಕ್ರಿಟ್ ನಿಂದ ಮಾಡಿರದಿದ್ದರೆ ನಿಮಗೆ ಸಹಾಯಧನವನ್ನು ನೀಡಲು ಬರುವುದಿಲ್ಲ.
ಮೊದಲು ನೀವು ದನದ ಕೊಟ್ಟಿಗೆ ನಿರ್ಮಾಣ ಮಾಡಬೇಕೆಂದುಕೊಳ್ಳುವ ಖಾಲಿ ಜಾಗದಲ್ಲಿ ಫೋಟೋ ತೆಗೆಯಬೇಕು. ನಂತರ 40MM ಜೆಲ್ಲಿ ಕಲ್ಲು ಅಂದರೆ(ಕಡಿಗಳು) ಗಳನ್ನು ಹಾಕಿ ಸಮತಟ್ಟು ಮಾಡಬೇಕಾಗಿರುತ್ತದೆ. ಇದಾದ ನಂತರ ಅದರ ಮೇಲೆ ಕಾಂಕ್ರೆಟ್ ನಿಂದ ನೆಲವನ್ನು ಮುಚ್ಚಬೇಕಾಗುತ್ತದೆ.
* ದನಗಳ ಕೊಟ್ಟಿಗೆಯಲ್ಲಿ ಮೇವು ಅಥವಾ ನೀರಿನ ಸೌಲಭ್ಯಕ್ಕಾಗಿ ಗೋದಲಿಯನ್ನು ಇಟ್ಟಿಗೆಯನ್ನು ಬಳಸಿ ಕಟ್ಟಬೇಕು. ಕಟ್ಟಿದ ನಂತರ ಇಟ್ಟಿಗೆಗಳನ್ನು ಪ್ಲಾಸ್ಟರ್ ನಿಂದ ಮುಚ್ಚಬೇಕು.
* ಹಾಗೆಯೇ ದನಗಳನ್ನು ಗೋದಲಿಗೆ ಕಟ್ಟಲು ಕಬ್ಬಿಣದ ಬಳೆಗಳನ್ನು ಸಹ ಬಳಸಬಹುದು.
* ದನಗಳ ಮೂತ್ರ ಮತ್ತು ಕೊಟ್ಟಿಗೆ ತೊಳೆದ ನಂತರ ಅದರ ನೀರು ಸುಲಭವಾಗಿ ಹೋಗಲು ಒಂದು ಗುಂಡಿ ಅಥವಾ ಒಂದು ಚರಂಡಿ ವ್ಯವಸ್ಥೆಯನ್ನು ಮಾಡಬೇಕಾಗಿರುತ್ತದೆ. ಅಥವಾ ನಿಮಗೆ ಚರಂಡಿ ವ್ಯವಸ್ಥೆ ಇಲ್ಲದಿದ್ದಲ್ಲಿ ನೀರನ್ನು ಇಂಗು ಗುಂಡಿಗೆ ಬಿಡಬಹುದು.
* ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ದನದ ಕೊಟ್ಟಿಗೆಯ ಸುತ್ತಲೂ ಗೋಡೆಯನ್ನು ಕಟ್ಟಬೇಕಾಗುತ್ತದೆ.
* ಈ ಕೊಟ್ಟಿಗೆಯನ್ನ ನಿರ್ಮಾಣ ಮಾಡಲು ಸಾಮಾನ್ಯವಾಗಿ 22,000ರೂ.ಗಳ ಖರ್ಚು ಬರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಒಟ್ಟು ಸಹಾಯಧನ 43,000ರೂ.ಗಳು ಬರುತ್ತದೆ.
ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನ ಹೆಚ್ಚಳ ಮಾಡಿದ ನಂತರ ಒಟ್ಟು ಸಹಾಯಧನವಾಗಿ 57,000 ರೂ ಸಿಗುತ್ತದೆ. ಈ ಮೊತ್ತವನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೂ ಸಮವಾಗಿ ನೀಡಲಾಗುತ್ತದೆ. ಈ ಮೊತ್ತದಲ್ಲಿ ಅಂದರೆ ಒಟ್ಟಾರೆ 57,000ರೂ.ಗಳಲ್ಲಿ ಸರಿ ಸುಮಾರು 10,556ರೂ.ಗಳನ್ನು ಕೂಲಿ ಮೊತ್ತವಾಗಿ ಈ ಯೋಜನೆಯಡಿ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಸುಮಾರು 46,644ರೂ.ಗಳನ್ನು ಈ ಯೋಜನೆಯಡಿಯಲ್ಲಿ ದನದ ಕೊಟ್ಟಿಗೆ ಅಥವಾ ದನದಶೆಡ್ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಈ ಯೋಜನೆಯ ಅಡಿಯಲ್ಲಿ ಸಹಾಯಧನ ನೀಡಲಾಗುತ್ತದೆ.
ಫಲಾನುಭವಿಗಳು ಜಾನುವಾರು ಶೆಡ್ ಅಥವಾ ಕೊಟ್ಟಿಗೆಯನ್ನು ನಿರ್ಮಿಸಿಕೊಳ್ಳಲು,
#ಕನಿಷ್ಠ 4 ಜಾನುವಾರುಗಳನ್ನು ಹೊಂದಿರಬೇಕು.
#ಸಂಬಂಧಪಟ್ಟ ಪಶುವೈದ್ಯಾಧಿಕಾರಿಗಳಿಂದ ಜಾನುವಾರು ಇರುವ ಕುರಿತ ದೃಢೀಕರಣ ಪತ್ರವನ್ನು ಪಡೆಯಬೇಕು.
#ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಉದ್ಯೋಗ ಖಾತರಿ ಚೀಟಿ ಪುಸ್ತಕವನ್ನು ಹೊಂದಿರಬೇಕು.
#ಈ ಮೇಲಿನ ಉಲ್ಲೇಕಿಸಿದ ದಾಖಲಾತಿಗಳೊಂದಿಗೆ ಸ್ಥಳೀಯ ಗ್ರಾಮ ಪಂಚಾಯತಿಗೆ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
# ಗ್ರಾಮ ಪಂಚಾಯಿತಿಯವರ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಫಲಾನುಭವಿಯ ಹೆಸರು ಸೇರಿಸಿಕೊಂಡು ಮೇಲಾಧಿಕಾರಿಗಳಿಂದ ಅನುಮೋದನೆ ಪಡೆದ ನಂತರ ರೈತರು ಅವರ ದನದ ಕೊಟ್ಟಿಗೆಯ ಕಾಮಗಾರಿಯನ್ನು ಪ್ರಾರಂಭಿಸಬೇಕು.
# ಈ ಹಿಂದೆ ಉದ್ಯೋಗ ಖಾತರಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 43,000ರೂ.ಗಳ ಸಹಾಯಧನ ಹಾಗೂ ಸಾಮಾನ್ಯ ವರ್ಗದವರಿಗೆ 19,000 ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನೀಡಲಾಗುತ್ತಿತ್ತು.
ಈ ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚಿಸಿದ ಸಹಾಯಧನದ ಬಗ್ಗೆ ತಿಳಿಯಬೇಕೆಂದರೆ,
ಸಾಮಾನ್ಯ ವರ್ಗದವರಿಗೂ ಸಹ 57,000ರೂ.ಗಳ ಸಹಾಯಧನ ಈ ಯೋಜನೆ ಅಡಿಯಲ್ಲಿ ನೀಡಲಾಗುವುದು. ಸಾಮಾನ್ಯವಾಗಿ 4 ಕ್ಕಿಂತ ಹೆಚ್ಚು ಜಾನುವಾರು ಸಾಕಣೆ ಮಾಡುವವರು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.
ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಜಾನುವಾರು ಸೆಡ್ ನಿರ್ಮಾಣಕ್ಕೆ ಸಹಾಯಧನದ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ರಾಜ್ಯದಲ್ಲಿ ಈ ಯೋಜನೆಯ ಲಾಭವನ್ನು ಪಡೆದುಕೊಂಡು ಸಹಸ್ರಾರು ಕುಟುಂಬಗಳು ಶೆಡ್ ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡು ಜಾನುವಾರು ಸಾಕಣೆಯೊಂದಿಗೆ ಉತ್ತಮ ಆದಾಯ ಮಾಡಿಕೊಳ್ಳುತ್ತಿದ್ದಾರೆ.
ಇದೀಗ ದನದ ಶೆಡ್ ನಿರ್ಮಾಣ ಮಾಡಿಕೊಳ್ಳಲು ಸಹಾಯ ಧನ ಹೆಚ್ಚಿಸಿದೆ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಅಥವಾ ಸಂಬಂಧಪಟ್ಟ ಪಂಚಾಯಿತಿಯನ್ನು ಸಂಪರ್ಕಿಸಿರಿ.
]]>ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಗೂಗಲ್ ಪ್ಲೇ ಸ್ಟೋರ್ ಮೂಲಕ ಅಥವಾ https://play.google.com/
ನಂತರ ರೈತ select ಮಾಡಿ
ನಂತರ ವರ್ಷ,ಋುತು, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ.
ನಂತರ ಸರ್ವೇ ನಂಬರ್ ಹಾಕಿ,ಹಿಸ್ಸಾಆಯ್ಕೆ ಮಾಡಿ,ಸಮೀಕ್ಷೆಯ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ನಂತರ ಬೆಳೆವಿವರ ವೀಕ್ಷಿಸಿ ಮೇಲೆ ಕ್ಲಿಕ್ ಮಾಡಿ
ನಂತರ photo ಮೇಲೆ ಕ್ಲಿಕ್ ಮಾಡಿದರೆ ನೀವು ಬೆಳೆದ ಬೆಳೆ ಹಾಗೂ ಫೋಟೊ ಅಪ್ಲೊಡ್ ಸರಿಯಾಗಿರುವುದನ್ನು ಪರಿಕ್ಷೀಸಿ.
ಸರಿಯಾಗಿರದಿದ್ದರೆ,ಆಕ್ಷೇಪಣೆ ಸಲ್ಲಿಸಿದರೆ ಮತ್ತೆ ಬೆಳೆ ಸಮಿಕ್ಷೆ ಮಾಡಿ ಸರಿಪಡಿಸಲು ಅವಕಾಶವಿರುತ್ತದೆ.
ಏನಿದು ಬೆಳೆ ದರ್ಶಕ ಆ್ಯಪ್?
ಈ ಅಪ್ಲಿಕೇಶನ್ ಮಾಡಿದ ಉದ್ದೇಶ ಬೆಳೆ ಸಮೀಕ್ಷೆಯನ್ನು (Crop survey)ನೋಡಲು.. ಇದರಲ್ಲಿ ನೀವು ಅಪ್ಲೋಡ್ ಮಾಡಿದ ಚಿತ್ರಗಳನ್ನು ಮತ್ತು ಸಮೀಕ್ಷೆ ಮಾಡಿದ ಸರ್ವೇಯರ್ ವಿವರಗಳನ್ನು ನೋಡಬಹುದು.
ತಮ್ಮ ಮೊಬೈಲ್ ಮೂಲಕ ಬೆಳೆಗಳ ಸಮೀಕ್ಷೆ(Bele samikshe) ಮಾಡಬಹುದು. ಅಥವಾ ನೆರೆಯ ಖಾಸಗಿ ವ್ಯಕ್ತಿಗಳ (Private resident) ಮೊಬೈಲ್ ಮೂಲಕ ಜಮೀನುಗಳ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ನಿಮ್ಮ ಜಮೀನಿನ ಸರ್ವೆ ನಂಬರ್(Survey number) ಮತ್ತು ಜಮೀನಿನ ಫೊಟೋ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಮೊಬೈಲ್ ನಲ್ಲಿ Bele darshak app ಮೂಲಕ ಕ್ಷಣಾರ್ಧದಲ್ಲಿ ನೋಡಬಹುದು. ಒಂದು ವೇಳೆ ತಪ್ಪಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು.
ಬೆಳೆ ದರ್ಶಕ್ ಆ್ಯಪ್(bele darshaka app) ಇನ್ಸ್ ಸ್ಟಾಲ್ ಮಾಡಿಕೊಂಡ ನಂತರ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಇನ್ನಿತರ ಮಾಹಿತಿ ನಮೂದಿಸಬೇಕು. ಬೆಳೆ ದರ್ಶಕ್ ಆ್ಯಪ್(Bele darshaka application) ಮೂಲಕ ಜಮೀನಿನಲ್ಲಿ ಬೆಳೆ ಸಮೀಕ್ಷೆ (Bele samikshe)ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ (Crop survey)ಸಮಯದಲ್ಲಿ ತೆಗೆಯಲಾದ ಜಿಪಿಎಸ್ ಆಧಾರಿತ (GPS Photo)ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ಅಲ್ಲದೆ ರೈತರ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ, (Mobile number)ರೈತರು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ನೋಡಬಹುದು.
ಒಂದು ವೇಳೆ ಮಾಹಿತಿ ತಪ್ಪಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು.ಮೇಲ್ವಿಚಾರಕರು ಸೂಕ್ತ ಬೆಳೆಗಳನ್ನು ದಾಖಲಿಸಿ ರೈತರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುತ್ತಾರೆ. ಇನ್ನೇಕೆ ತಡ ಒಮ್ಮೆ ನಿಮ್ಮ ಬೆಳೆ ಸಮೀಕ್ಷೆಯಲ್ಲಿ ಎಲ್ಲಾ ಸರ್ವೆ ನಂಬರ್, ಮಾಹಿತಿ ಹಾಗೂ ಫೋಟೋ ಸರಿಯಾಗಿ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಡಿ
]]>
ಎಲ್ಲಾ ರೈತಭಾಂದವರಿಗೂ ನಮಸ್ಕಾರ.ಯಾವುದೇ ಮದ್ಯವರ್ತಿಗಳಿಲ್ಲದೇ ಬೀಜ(seeds),ಗೊಬ್ಬರ(fertiliser), ಪಿಡೇನಾಶಕ(pesticide), ಕೃಷಿ ಉಪಕರಣಗಳು(Agriculture equipment's)ಸೇರಿದಂತೆ ರೈತರ ದೈನಂದಿನ ಚಟುವಟಿಕೆಗಳಿಗೆ ಬೇಕಾದ ಕೃಷಿ ಪರಿಕರಣಗಳನ್ನು ಉತ್ಪಾದಕರಿಂದ ರೈತರ ಮನೆ ಬಾಗಿಲಿಗೆ ತಲುಪಿಸಲು ಕೃಷಿ ಪದವಿಧರರು ಕಟ್ಟಿರುವ ಸಾಮಾಜಿಕ ಮಾದ್ಯಮವೇ krishibuy.in
ಈ ಸಾಮಾಜಿಕ ಮಾದ್ಯಮದಲ್ಲಿ ಕೃಷಿ ಪರಿಕರಗಳ ಜೊತೆ ಅದನ್ನು ಹೇಗೆ,ಯಾವಾಗ ಮತ್ತು ಯಾವ ಪ್ರಮಾಣದಲ್ಲಿ ಬಳಸಬೇಕೆಂಬ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲ್ಲಿದ್ದೇವೆ.
ಉದಾಹರಣೆಗೆ ನಿಮ್ಮ ಮನೆ ಸುತ್ತಮುತ್ತಾ ಅಥವಾ ಮನೆಯ ಮೇಲೆ ರಾಜಗಿರಿ, ಕೊತ್ತಂಬರಿ ಸೊಪ್ಪು,ಮೆಂತ್ಯೆ ಸೊಪ್ಪು,ಪಾಲಕ್,ಹಾಗಲಕಾಯಿ,ಬದನೆ,ಬೆಂಡೆಕಾಯಿ,ಟೊಮೆಟೊ, ಮೆಣಸಿನಕಾಯಿ,ಸಬ್ಬಸಿಗೆ ಸೇರಿದಂತೆ 10 ತರಕಾರಿಗಳನ್ನು ಬೆಳೆಯಬೇಕೆ?
ಹಾಗಾದರೆ ಈ ಕೆಳಗಿನ ಲಿಂಕ್ ಮೂಲಕ ಆರ್ಡರ್ ಮಾಡಿದರೆ ಮೇಲಿನ 10 ತರಕಾರಿ ಬೀಜಗಳನ್ನು ನಿಮ್ಮ ಮನೆ ಬಾಗಿಲಿಗೆ ತಲುಪಿಸುತ್ತೇವೆ
https://krishibuy.in/product/kitchen-garden/
ನಿಮಗೆ ಬೇಕಾದ ಕೃಷಿ ಪರಿಕರಗಳನ್ನು ಹೀಗೆ ಆರ್ಡರ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ ಕೃಷಿ ಪರಿಕರಗಳ ಮೇಲೆ ಕ್ಲಿಕ್ ಮಾಡಿ
ನಂತರ varients ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ಪ್ರಮಾಣವನ್ನು ಆಯ್ಕೆ ಮಾಡಿ
ನಂತರ Rate ಮೇಲೆ ಕ್ಲಿಕ್ ಮಾಡಿ,Add to cart ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ 1 ಕ್ಕಿಂತ ಹೆಚ್ಚಿನ ಪ್ರಮಾಣದ ಪ್ಯಾಕೇಟ್ ಗಳು ಬೇಕಾದಲ್ಲಿ +ಮೇಲೆ ಕ್ಲಿಕ್ ಮಾಡಿ,Check out ಮೇಲೆ ಕ್ಲಿಕ್ ಮಾಡಿ
(ಸೂಚನೆ:ಮತ್ತೇನಾದರು ಬೇಕಾದಲ್ಲಿ continue shopping ಮೇಲೆ ಕ್ಲಿಕ್ ಮಾಡಿ ಬೇಕಾದ ಕೃಷಿ ಪರಿಕರಗಳನ್ನು ಆಯ್ಕೆ ಮಾಡಿ check out ಮೇಲೆ ಕ್ಲಿಕ್ ಮಾಡಿ)
ನಂತರ ನಿಮ್ಮ ಮನೆಯ ಸಂಪೂರ್ಣವಾದ ವಿಳಾಸವನ್ನು ಭರ್ತಿ ಮಾಡಿ,Place order ಮೇಲೆ ಕ್ಲಿಕ್ ಮಾಡಿ
(ಸೂಚನೆ:ನಿಮ್ಮ mail id ಇಲ್ಲದಿದ್ದರೆ [email protected] ಎಂದು ತುಂಬಿ)
ನಂತರ ನಿಮಗೆ ಬೇಕಾದ ಪೇಮೆಂಟ್ ವಿಧಾನಗಳನ್ನು(Google pay,phone pay ಅಥವಾ credit card) ಆಯ್ಕೆ ಮಾಡಿ continue ಮೇಲೆ ಕ್ಲಿಕ್ ಮಾಡಿದರೆ ನೀವು ಮಾಡಿದ ಆರ್ಡರ್ ಪೂರ್ಣಗೊಳ್ಳುತ್ತದೆ.
.
ಮುಂದಿವ ಒಂದರಿಂದ ಎರಡು ದಿನಗಳಲ್ಲಿ ನೀವು ಆರ್ಡರ್ ಮಾಡಿದ ಕೃಷಿಪರಿಕರ ನಿಮ್ಮ ಮನೆಬಾಗಿಲಿಗೆ ತಲುಪಲಿದೆ
ನಿಮಗೆ ಆರ್ಡರ್ ಮಾಡಲು ಏನಾದರು ಸಮಸ್ಯೆಯಾದಲ್ಲಿ ಅಥವಾ ಹೆಚ್ಚಿನ ಮಾಹಿತಿಗಾಗಿ 8431306848 ನಂಬರ್ ಗೆ ವಾಟ್ಸಪ್ ಅಥವಾ ಕಾಲ್ ಮಾಡಿ ಸಂಪರ್ಕಿಸಬಹುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
https://youtu.be/WHMsRQwdwoQ?si=lXtT3CMWqqK5hluq
ಮುಂದಿನ ದಿನಗಳಲ್ಲಿ ಕೃಷಿ ಪರಿಕರಗಳನ್ನು ಮಾರಾಟ ಮಾಡುವುದಷ್ಟೇ ಅಲ್ಲದೇ ರೈತರು ಬೆಳೆದ ಉತ್ಪನ್ನಗಳನ್ನು ತಮಗೆ ಬೇಕಾದ ದರದಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗುವುದು.
]]>
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ನಿಮಗೆ ಗೊತ್ತಿಲ್ಲದೇ ಹಾಗೆ ನಿಮ್ಮ ಪಹಣಿಯಲ್ಲಿ(RTC) ಅವರ ಹೆಸರು ಹಾಕಿದ್ದಾರೆ ಎಂಬುದನ್ನು ರೈತರು ಒಮ್ಮೆ ಪರಿಶೀಲಿಸಿ. ಈ ಕೆಲಸವನ್ನು ಪ್ರತಿಯೊಂದು ರೈತರು ಆದಷ್ಟು ಬೇಗ ಮಾಡಬೇಕು. ಈ ಮಾಹಿತಿ ನಿಮ್ಮ ಕಾನೂನು ಹೋರಾಟಕ್ಕೆ ನಿರ್ಣಾಯಕ ಹಾಗೂ ಸಾಕ್ಷ್ಯ ಸಂಗ್ರಹಿಸಲು ಅಗತ್ಯವಾದ ಪ್ರಕ್ರಿಯೆ ಆಗಿರುತ್ತದೆ. ಆದ್ದರಿಂದ ಇಂದೇ ನಿಮ್ಮ ಪಹಣಿಯ(Uthara) ಕಾಪಿ ಪಡೆದು ಪರಿಶೀಲನೆ ಮಾಡಿ, ಒಂದು ವೇಳೆ ಯಾರಾದರು ಎಂದು ನಮೂದಿಸಲಾಗಿದ್ದಲ್ಲಿ ಕೂಡಲೇ ಜಮೀನಿನ ದಾಖಲೆ(Land records) ಹಾಗೂ ಪಹಣಿಯೊಂದಿಗೆ ತಹಶಿಲ್ದಾರ್ ಅಥವಾ ಜಿಲ್ಲಾದಿಕಾರಿಗಳಿಗೆ ದೂರು ಸಲ್ಲಿಸಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://youtu.be/ZG-WJ9OlrTc?si=0Pb9RqHal3p3URQW
ನಿಮ್ಮ ಪಹಣೆಯಲ್ಲಿ(pahani) ಯಾರ ಹೆಸರಿದೆ ಎಂದು ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಲಿಂಕ್ ಮೋಲೆ ಕ್ಲಿಕ್ ಮಾಡಿ
https://landrecords.karnataka.gov.in/Service2/
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಪಹಣೆಯಲ್ಲಿ ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
Bele sala-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ-crop loan status - https://krushirushi.in/Bele-sala-crop-loan-status-1638
]]>
ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ (FRUITS ID) ಪ್ರೊಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ(Parihara Portal) ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ(Direct benefit transfer) ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುದು.
https://everydaytrends.in/kmf-to-procure-maize-at-2400-per-quintal/
ರಾಜ್ಯದ ರೈತರಿಗೆ ಕೆಎಂಎಫ್ ನಿಂದ ಗುಡ್ ನ್ಯೂಸ್: ಕ್ವಿಂಟಾಲ್ ಗೆ 2400 ರೂ. ದರದಲ್ಲಿ ಮೆಕ್ಕೆಜೋಳ ಖರೀದಿ
ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.
ಬೆಳೆ ಹಾನಿ ಪರಿಹಾರ(Bele hani parihara) ಪಡೆದುಕೊಳ್ಳಲು (FRUITS ID) ಪ್ರೊಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೊಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ (FRUITS ID) ಪ್ರೊಟ್ಸ್ ಐಡಿ ಸೃಜಿಸಿಕೊಳ್ಳಬಹುದು. (FRUITS ID) ಪ್ರೊಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.
ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್/Aadhaar number ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ - https://krushirushi.in/Tahasildar-varification-status-approved-1634
]]>2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy for croploss) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
https://everydaytrends.in/kmf-to-procure-maize-at-2400-per-quintal/
ರಾಜ್ಯದ ರೈತರಿಗೆ ಕೆಎಂಎಫ್ ನಿಂದ ಗುಡ್ ನ್ಯೂಸ್: ಕ್ವಿಂಟಾಲ್ ಗೆ 2400 ರೂ. ದರದಲ್ಲಿ ಮೆಕ್ಕೆಜೋಳ ಖರೀದಿ
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/PariharaPayment/
ನಂತರ "ಆಧಾರ್ ಸಂಖ್ಯೆ/Aadhar number" ಮೇಲೆ ಕ್ಲಿಕ್ ಮಾಡಿ
ನಂತರ calamity type "Flood" ಎಂದು ಋುತು "2024-25" ಎಂದು select ಮಾಡಿ
ನಂತರ ನಿಮ್ಮ ಆಧಾರ್ ನಂಬರ್/Aadhar number ಹಾಕಿ,captch code ಹಾಕಿ,ವಿವರಗಳನ್ನು ಪಡೆಯಲು/Fetch details ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪರಿಹಾರ ಹಣ ಜಮಾ ಸ್ಟೇಟಸ್ ತಿಳಿಯಲಿದೆ
ಕೃಷಿ ಸಾಲ ಮನ್ನಾ ಯೋಜನೆಗೆ ಅನುಮೋದನೆ ನೀಡಿರುವ ತೆಲಂಗಾಣ ಸಚಿವ ಸಂಪುಟ, 'ರೈತು ಭರೋಸಾ' ಯೋಜನೆ ಅನುಷ್ಠಾನದಲ್ಲಿ ಪಾರದರ್ಶಕತೆ ಖಾತ್ರಿಪಡಿಸುವ ಸಲುವಾಗಿ ಸಂಪುಟ ಉಪಸಮಿತಿ ನೇಮಕ ಮಾಡಲು ಶುಕ್ರವಾರ ನಿರ್ಧರಿಸಿದೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ, 'ವಿಧಾನಸಭೆ ಚುನಾವಣೆಗೂ ಮುನ್ನ ವರಂಗಲ್ನಲ್ಲಿ ಪ್ರಕಟಿಸಿದ 'ರೈತ ಘೋಷಣೆ'ಯಲ್ಲಿ ಹೇಳಿರುವಂತೆ ಕೃಷಿ ಸಾಲ ಮನ್ನಾ ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ' ಎಂದರು.
'2018 ರ ಡಿಸೆಂಬರ್ 12ರಿಂದ 2023 ರ ಡಿಸೆಂಬರ್ 09 ರವರೆಗಿನ ಅವಧಿಯಲ್ಲಿ ರೈತರು ತೆಗೆದುಕೊಂಡಿರುವ ಕೃಷಿ ಸಾಲವನ್ನು ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ₹31 ಸಾವಿರ ಕೋಟಿ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ' ಎಂದರು.
ಹಾಗಾದರೆ ಕರ್ನಾಟಕದಲ್ಲಿ ಬೆಳೆಸಾಲ ಮನ್ನಾ ಸ್ಟೇಟಸ್ ಹೇಗಿದೆ?
ನೆರೆಯ ತೆಲಂಗಾಣದಲ್ಲಿ ₹2 ಲಕ್ಷದವರೆಗೆ
ರೈತರ ಸಾಲ ಮನ್ನಾ ಮಾಡಲು ಅಲ್ಲಿನ ಸರ್ಕಾರ ನಿರ್ಧಾರ
ಮಾಡಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರೈತರ ಸಾಲ ಮನ್ನಾ
ಮಾಡಿ ರೈತರನ್ನು ಋಣಮುಕ್ತರನ್ನಾಗಿಸಿ' ಎಂದು ವಿಧಾನಸಭೆ
ವಿರೋಧಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದ್ದಾರೆ
Belesala manna status 2024-ಬೆಳೆಸಾಲ ಮನ್ನಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ
ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ/farmer" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ - https://krushirushi.in/Tahasildar-varification-status-approved-1634
]]>
ದಾವಣಗೆರೆ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆಹಾನಿಗೆ(croploss) ಪರಿಹಾರವಾಗಿ ರೈತರಿಗೆ 1.42 ಕೋಟಿ ರೂಪಾಯಿ ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಬೆಳೆ ಹಾನಿ ಸಮೀಕ್ಷೆ ನಡೆಯುತ್ತಿದೆ. ಶೀಘ್ರವೇ ವರದಿ ಬರುವ ನಿರೀಕ್ಷೆ ಇದ್ದು, ಹೆಚ್ಚಿನ ಪರಿಹಾರ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ರೈತರಿಗೆ ಭರವಸೆ ನೀಡಿದ್ದಾರೆ.
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಬೆಳೆ ಪರಿಹಾರ ಬಿಡುಗಡೆಯಾಗಿದ್ದು,ನಿಮ್ಮ ಬೆಳೆ ಪರಿಹಾರ ಸ್ಟೇಟಸ್(Bele parihara status) ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
'ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲಿ ಆಗಬೇಕಿತ್ತು. ಆದರೆ, 16.6 ಸೆಂ.ಮೀ (ಶೇ 61ರಷ್ಟು ಹೆಚ್ಚು) ಮಳೆ ಸುರಿದಿದೆ. ಅಂದಾಜು 56,993 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದೆ(Bele hani). ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ಇನ್ನು 3-4 ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, 15 ದಿನಗಳಲ್ಲಿ ಪರಿಹಾರ(Bele parihara) ವಿತರಿಸುತ್ತೇವೆ' ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಈ ಅವಧಿಯಲ್ಲಿ ಮಳೆಯಿಂದ ಸುಮಾರು 84 ಮನೆಗಳು ಸಂಪೂರ್ಣವಾಗಿ ಹಾನಿಗೆ ಒಳಗಾಗಿವೆ.ಇನ್ನು ರಾಜ್ಯದ ಹಲವು ಪ್ರದೇಶಗಳಲ್ಲಿ 2074 ಮನೆಗಳು ಭಾಗಶಹ ಹಾನಿ ಒಳಗಾಗಿವೆ. ಪೂರ್ತಿ ಮನೆ ಹಾನಿಗೆ 1.20 ಲಕ್ಷ ಪರಿಹಾರ ನೀಡಬೇಕು. ಜೊತೆಗೆ ಮನೆ ನಿರ್ಮಾಣ ಮಾಡಲು ಈಗಾಗಲೇ ಆದೇಶಿಸಲಾಗಿದೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಕುಡಿಯುವ ನೀರನ್ನು ಸಂಗ್ರಹಿಸಿ ಬೆಳೆಗೆ ನೀರು ಬಿಡಲು ಹೇಳಿದ್ದೇನೆ. ರಾಜ್ಯದ ಹಲವೆಡೆ ಅತಿವೃಷ್ಟಿಯಿಂದ 25 ಜನರು ಸಾವನ್ನಪ್ಪಿದ್ದಾರೆ. ಮಳೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.
ಮಳೆಯಿಂದ 9 ಸಾವಿರ ಹೆಕ್ಟರ್ ಕೃಷಿ ಜಮೀನು ಹಾಳಾಗಿದೆ. 50 ಸಾವಿರ ಹೆಕ್ಟರ್ ತೋಟಗಾರಿಕಾ ಪ್ರದೇಶ ಕೂಡ ಹಾನಿಯಾಗಿದೆ.ಈ ಬಗ್ಗೆ ಜಂಟಿ ಸರ್ವೆ ಮಾಡಿ ಒಂದು ವಾರದೊಳಗೆ ಸರ್ವೆ ವರದಿ ಸಲ್ಲಿಸುವಂತೆ ಸೂಚಿಸಿದ್ದೇನೆ ಎಂದು ಡಿಸಿ ಜಿಲ್ಲಾ ಪಂಚಾಯತ್ ಸಿಇಓ ಗಳ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.
13.87 ಲಕ್ಷ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾದ ಸರ್ಕಾರ,ರದ್ದಾದ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಅನ್ನಭಾಗ್ಯ ಗೃಹಲಕ್ಷ್ಮಿ ಹಣ ಬಂದ್/Suspended ration card list - https://krushirushi.in/Cancelled-suspended--Ration-card-list-1628
]]>ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ಕೃಷಿ ಪರಿಕರಗಳನ್ನು ನಿಮ್ಮ ಮೊಬೈಲ್ ನಲ್ಲೇ ಆರ್ಡರ್ ಮಾಡಿದರೆ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದ್ದೇವೆ
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಕೃಷಿಹೊಂಡ, ಪ್ಯಾಕ್ಹೌಸ್, ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ
https://horticulturedir.karnataka.gov.in/info-2/Facilities+available+to+farmers/kn
ವಿವಿಧ ಯೋಜನೆಗಳು:
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ:
ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೆÇೀಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:
ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಯಾಕ್ಹೌಸ್ ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ:
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.75 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.
ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ:
ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಮತ್ತು ಬೈಯೋಡೈಜಿಸ್ಟರ್ ಮತ್ತು ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಸಹ ಅರ್ಜಿ ಆಹ್ವಾನಿಸಲಾಗಿದೆ.
ಮೇಲ್ಕಂಡ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಲಾಗಿದೆ. ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.
]]>
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ಕೃಷಿ ಪರಿಕರಗಳನ್ನು ನಿಮ್ಮ ಮೊಬೈಲ್ ನಲ್ಲೇ ಆರ್ಡರ್ ಮಾಡಿದರೆ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದ್ದೇವೆ
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ.
13.87 ಲಕ್ಷ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾದ ಸರ್ಕಾರ,ರದ್ದಾದ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಅನ್ನಭಾಗ್ಯ ಗೃಹಲಕ್ಷ್ಮಿ ಹಣ ಬಂದ್/Suspended ration card list - https://krushirushi.in/Cancelled-suspended--Ration-card-list-1628
]]>
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ಕೃಷಿ ಪರಿಕರಗಳನ್ನು ನಿಮ್ಮ ಮೊಬೈಲ್ ನಲ್ಲೇ ಆರ್ಡರ್ ಮಾಡಿದರೆ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದ್ದೇವೆ
ನಿಮಗೆ ಗೊತ್ತಿಲ್ಲದೇ ಹಾಗೆ ನಿಮ್ಮ ಪಹಣಿಯಲ್ಲಿ(RTC) ಅವರ ಹೆಸರು ಹಾಕಿದ್ದಾರೆ ಎಂಬುದನ್ನು ರೈತರು ಒಮ್ಮೆ ಪರಿಶೀಲಿಸಿ. ಈ ಕೆಲಸವನ್ನು ಪ್ರತಿಯೊಂದು ರೈತರು ಆದಷ್ಟು ಬೇಗ ಮಾಡಬೇಕು. ಈ ಮಾಹಿತಿ ನಿಮ್ಮ ಕಾನೂನು ಹೋರಾಟಕ್ಕೆ ನಿರ್ಣಾಯಕ ಹಾಗೂ ಸಾಕ್ಷ್ಯ ಸಂಗ್ರಹಿಸಲು ಅಗತ್ಯವಾದ ಪ್ರಕ್ರಿಯೆ ಆಗಿರುತ್ತದೆ. ಆದ್ದರಿಂದ ಇಂದೇ ನಿಮ್ಮ ಪಹಣಿಯ(Uthara) ಕಾಪಿ ಪಡೆದು ಪರಿಶೀಲನೆ ಮಾಡಿ, ಒಂದು ವೇಳೆ ಯಾರಾದರು ಎಂದು ನಮೂದಿಸಲಾಗಿದ್ದಲ್ಲಿ ಕೂಡಲೇ ಜಮೀನಿನ ದಾಖಲೆ(Land records) ಹಾಗೂ ಪಹಣಿಯೊಂದಿಗೆ ತಹಶಿಲ್ದಾರ್ ಅಥವಾ ಜಿಲ್ಲಾದಿಕಾರಿಗಳಿಗೆ ದೂರು ಸಲ್ಲಿಸಿ
Land records karnataka-ನಿಮಗೆ ಗೊತ್ತಿಲ್ಲದೇ ಯಾರಾದರೂ ನಿಮ್ಮ ಪಹಣೆಯಲ್ಲಿ ಅವರ ಹೆಸರು ಹಾಕಿದ್ದಾರಾ ಚೆಕ್ ಮಾಡಿಕೊಳ್ಳಿ - https://krushirushi.in/Land-records-1646
ನಿಮ್ಮ ಪಹಣೆಯಲ್ಲಿ(pahani) ಯಾರ ಹೆಸರಿದೆ ಎಂದು ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಲಿಂಕ್ ಮೋಲೆ ಕ್ಲಿಕ್ ಮಾಡಿ
https://landrecords.karnataka.gov.in/Service2/
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಪಹಣೆಯಲ್ಲಿ ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
Bele sala-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ-crop loan status - https://krushirushi.in/Bele-sala-crop-loan-status-1638
]]>ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ಕೃಷಿ ಪರಿಕರಗಳನ್ನು ನಿಮ್ಮ ಮೊಬೈಲ್ ನಲ್ಲೇ ಆರ್ಡರ್ ಮಾಡಿದರೆ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದ್ದೇವೆ
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ-Aadhaar not linked croploss farmers list - https://krushirushi.in/Aadhaar-not-linked-croploss-farmers-list-1636
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ಕೃಷಿ ಪರಿಕರಗಳನ್ನು ನಿಮ್ಮ ಮೊಬೈಲ್ ನಲ್ಲೇ ಆರ್ಡರ್ ಮಾಡಿದರೆ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದ್ದೇವೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ಕೃಷಿ ಪರಿಕರಗಳನ್ನು ನಿಮ್ಮ ಮೊಬೈಲ್ ನಲ್ಲೇ ಆರ್ಡರ್ ಮಾಡಿದರೆ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದ್ದೇವೆ
ನಿಮಗೆ ಗೊತ್ತಿಲ್ಲದೇ ಹಾಗೆ ನಿಮ್ಮ ಪಹಣಿಯಲ್ಲಿ(RTC) ಅವರ ಹೆಸರು ಹಾಕಿದ್ದಾರೆ ಎಂಬುದನ್ನು ರೈತರು ಒಮ್ಮೆ ಪರಿಶೀಲಿಸಿ. ಈ ಕೆಲಸವನ್ನು ಪ್ರತಿಯೊಂದು ರೈತರು ಆದಷ್ಟು ಬೇಗ ಮಾಡಬೇಕು. ಈ ಮಾಹಿತಿ ನಿಮ್ಮ ಕಾನೂನು ಹೋರಾಟಕ್ಕೆ ನಿರ್ಣಾಯಕ ಹಾಗೂ ಸಾಕ್ಷ್ಯ ಸಂಗ್ರಹಿಸಲು ಅಗತ್ಯವಾದ ಪ್ರಕ್ರಿಯೆ ಆಗಿರುತ್ತದೆ. ಆದ್ದರಿಂದ ಇಂದೇ ನಿಮ್ಮ ಪಹಣಿಯ(Uthara) ಕಾಪಿ ಪಡೆದು ಪರಿಶೀಲನೆ ಮಾಡಿ, ಒಂದು ವೇಳೆ ಯಾರಾದರು ಎಂದು ನಮೂದಿಸಲಾಗಿದ್ದಲ್ಲಿ ಕೂಡಲೇ ಜಮೀನಿನ ದಾಖಲೆ(Land records) ಹಾಗೂ ಪಹಣಿಯೊಂದಿಗೆ ತಹಶಿಲ್ದಾರ್ ಅಥವಾ ಜಿಲ್ಲಾದಿಕಾರಿಗಳಿಗೆ ದೂರು ಸಲ್ಲಿಸಿ
FID survey number link-ಎಫ್ ಐಡಿಗೆ ಲಿಂಕ್ ಆದ ಸರ್ವೆ ನಂಬರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ,ನಿಮ್ಮ FID ಗೆ ಎಷ್ಟು ಸರ್ವೆ ನಂಬರ್ ಲಿಂಕ್ ಆಗಿದೆ ಚೆಕ್ ಮಾಡಿ - https://krushirushi.in/FID-survey-number-link-1633
ನಿಮ್ಮ ಪಹಣೆಯಲ್ಲಿ(pahani) ಯಾರ ಹೆಸರಿದೆ ಎಂದು ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಲಿಂಕ್ ಮೋಲೆ ಕ್ಲಿಕ್ ಮಾಡಿ
https://landrecords.karnataka.gov.in/Service2/
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಪಹಣೆಯಲ್ಲಿ ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
Bele sala-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ-crop loan status - https://krushirushi.in/Bele-sala-crop-loan-status-1638
]]>ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ಕೃಷಿ ಪರಿಕರಗಳನ್ನು ನಿಮ್ಮ ಮೊಬೈಲ್ ನಲ್ಲೇ ಆರ್ಡರ್ ಮಾಡಿದರೆ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದ್ದೇವೆ
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ(Pradan mantri fasal bheema yojane) 2023-24ನೇ ಸಾಲಿನಲ್ಲಿ ಖಾಸಗಿ ವಿಮೆ ಸಂಸ್ಥೆಯವರು ಮುಂಗಾರು ಹಂಗಾಮಿನಲ್ಲಿ ಹಾವೇರಿ ಜಿಲ್ಲೆಯ ಬೆಳೆ ಕಟಾವು ಪ್ರಯೋಗಗಳ(Crop cutting experiment)ಸಂಬಂಧ ರಾಜ್ಯ ಸರ್ಕಾರದ ಸಮಿತಿಯ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರದ ತಾಂತ್ರಿಕ ಸಲಹಾ ಸಮಿತಿಗೆ ಮೇಲ್ಮನವಿ ಸಲ್ಲಿಸಿದ್ದರು.
ರಾಜ್ಯದಿಂದ ಪ್ರಬಲವಾದ ವಾದವನ್ನು ಮಂಡಿಸಿದ್ದ ಫಲಶ್ರುತಿಯಾಗಿ ಆಕ್ಷೇಪಣೆಗೊಳಗಾಗಿದ್ದ ಸುಮಾರು 65000 ಅರ್ಹ ರೈತ ಫಲಾನುಭವಿಗಳಿಗೆ ರೂ. 45 ಕೋಟಿ ಬೆಳೆ ವಿಮಾ (crop insurance)ಪರಿಹಾರ ಮೊತ್ತವನ್ನು(Belevime hana bidugade) ಅಂದಾಜಿಸಲಾಗಿದೆ. ಇದನ್ನು ಸದ್ಯದಲ್ಲೇ ಇತ್ಯರ್ಥಪಡಿಸಲಾಗುವುದು ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ತಿಳಿಸಿದ್ದಾರೆ.
.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ಕೃಷಿ ಪರಿಕರಗಳನ್ನು ನಿಮ್ಮ ಮೊಬೈಲ್ ನಲ್ಲೇ ಆರ್ಡರ್ ಮಾಡಿದರೆ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದ್ದೇವೆ
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ(Vetarnary department)ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಉಚಿತ ಊಟ ವಸತಿಯೊಂದಿಗೆ 10 ದಿನಗಳ ಹೈನುಗಾರಿಕೆ,ಎರೆಹುಳು ಗೊಬ್ಬರ ತಯಾರಿಕೆ ತರಬೇತಿ-Free dairy vermicompost training - https://krushirushi.in/Free-dairy-vermicompost-training-1631
ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.
ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
Vetarnary department schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ
ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy - https://krushirushi.in/Cattle-shed-subsidy-scheme-1630
ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ಕೃಷಿ ಪರಿಕರಗಳನ್ನು ನಿಮ್ಮ ಮೊಬೈಲ್ ನಲ್ಲೇ ಆರ್ಡರ್ ಮಾಡಿದರೆ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದ್ದೇವೆ
'ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲಿ ಆಗಬೇಕಿತ್ತು. ಆದರೆ, 16.6 ಸೆಂ.ಮೀ (ಶೇ 61ರಷ್ಟು ಹೆಚ್ಚು) ಮಳೆ ಸುರಿದಿದೆ. ಅಂದಾಜು 56,993 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದೆ(Bele hani). ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ಇನ್ನು 3-4 ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, 15 ದಿನಗಳಲ್ಲಿ ಪರಿಹಾರ(Bele parihara) ವಿತರಿಸುತ್ತೇವೆ' ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಈ ಅವಧಿಯಲ್ಲಿ ಮಳೆಯಿಂದ ಸುಮಾರು 84 ಮನೆಗಳು ಸಂಪೂರ್ಣವಾಗಿ ಹಾನಿಗೆ ಒಳಗಾಗಿವೆ.ಇನ್ನು ರಾಜ್ಯದ ಹಲವು ಪ್ರದೇಶಗಳಲ್ಲಿ 2074 ಮನೆಗಳು ಭಾಗಶಹ ಹಾನಿ ಒಳಗಾಗಿವೆ. ಪೂರ್ತಿ ಮನೆ ಹಾನಿಗೆ 1.20 ಲಕ್ಷ ಪರಿಹಾರ ನೀಡಬೇಕು. ಜೊತೆಗೆ ಮನೆ ನಿರ್ಮಾಣ ಮಾಡಲು ಈಗಾಗಲೇ ಆದೇಶಿಸಲಾಗಿದೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ಕೃಷಿ ಪರಿಕರಗಳನ್ನು ನಿಮ್ಮ ಮೊಬೈಲ್ ನಲ್ಲೇ ಆರ್ಡರ್ ಮಾಡಿದರೆ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದ್ದೇವೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ (FRUITS ID) ಪ್ರೊಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ(Parihara Portal) ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ(Direct benefit transfer) ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುದು.
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.
ಬೆಳೆ ಹಾನಿ ಪರಿಹಾರ(Bele hani parihara) ಪಡೆದುಕೊಳ್ಳಲು (FRUITS ID) ಪ್ರೊಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೊಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ (FRUITS ID) ಪ್ರೊಟ್ಸ್ ಐಡಿ ಸೃಜಿಸಿಕೊಳ್ಳಬಹುದು. (FRUITS ID) ಪ್ರೊಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.
ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್/Aadhaar number ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ
ಆಧಾರ್ ಲಿಂಕ್ ಆಗದ ಬೆಳೆ ಪರಿಹಾರ ರೈತರ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿದರೆ ಬೆಳೆಪರಿಹಾರ ಜಮಾ-Aadhaar not linked croploss farmers list - https://krushirushi.in/Aadhaar-not-linked-croploss-farmers-list-1636
ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್(Survey number) ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.
ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ(Bele sala) ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.
FID survey number link-ಎಫ್ ಐಡಿಗೆ ಲಿಂಕ್ ಆದ ಸರ್ವೆ ನಂಬರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ,ನಿಮ್ಮ FID ಗೆ ಎಷ್ಟು ಸರ್ವೆ ನಂಬರ್ ಲಿಂಕ್ ಆಗಿದೆ ಚೆಕ್ ಮಾಡಿ - https://krushirushi.in/FID-survey-number-link-1633
ಸಾಲ(crop loan status)ವಿವರ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು
https://landrecords.karnataka.gov.in/Service2/
ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ.
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಇದನ್ನೂ ಓದಿ
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427
ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ. ಎಂಬ ಮಾಹಿತಿ ಇರುತ್ತದೆ.
ಈ ಮಾಹಿತಿ ರೈತರಿಗೆ ತುಂಬಾ ಅನುಕೂಲವಾಗಿದೆ ಸರ್ವೇ ನಂಬರ್ ನಮೂದಿಸಿದರೆ ಸಾಕು ರೈತರು ದೇಶದ ಯಾವುದೇ ಮೂಲೆಯಿಂದಲೂ ಮಾಹಿತಿ ಪಡೆಯಬಹುದು. ಕೇವಲ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವ ಮಾಹಿತಿ ಎಲ್ಲವೂ ರೈತರಿಗೆ ಸಿಗಲಿದೆ.
'ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲಿ ಆಗಬೇಕಿತ್ತು. ಆದರೆ, 16.6 ಸೆಂ.ಮೀ (ಶೇ 61ರಷ್ಟು ಹೆಚ್ಚು) ಮಳೆ ಸುರಿದಿದೆ. ಅಂದಾಜು 56,993 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದೆ(Bele hani). ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ಇನ್ನು 3-4 ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, 15 ದಿನಗಳಲ್ಲಿ ಪರಿಹಾರ(Bele parihara) ವಿತರಿಸುತ್ತೇವೆ' ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಈ ಅವಧಿಯಲ್ಲಿ ಮಳೆಯಿಂದ ಸುಮಾರು 84 ಮನೆಗಳು ಸಂಪೂರ್ಣವಾಗಿ ಹಾನಿಗೆ ಒಳಗಾಗಿವೆ.ಇನ್ನು ರಾಜ್ಯದ ಹಲವು ಪ್ರದೇಶಗಳಲ್ಲಿ 2074 ಮನೆಗಳು ಭಾಗಶಹ ಹಾನಿ ಒಳಗಾಗಿವೆ. ಪೂರ್ತಿ ಮನೆ ಹಾನಿಗೆ 1.20 ಲಕ್ಷ ಪರಿಹಾರ ನೀಡಬೇಕು. ಜೊತೆಗೆ ಮನೆ ನಿರ್ಮಾಣ ಮಾಡಲು ಈಗಾಗಲೇ ಆದೇಶಿಸಲಾಗಿದೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಕುಡಿಯುವ ನೀರನ್ನು ಸಂಗ್ರಹಿಸಿ ಬೆಳೆಗೆ ನೀರು ಬಿಡಲು ಹೇಳಿದ್ದೇನೆ. ರಾಜ್ಯದ ಹಲವೆಡೆ ಅತಿವೃಷ್ಟಿಯಿಂದ 25 ಜನರು ಸಾವನ್ನಪ್ಪಿದ್ದಾರೆ. ಮಳೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.
ಮಳೆಯಿಂದ 9 ಸಾವಿರ ಹೆಕ್ಟರ್ ಕೃಷಿ ಜಮೀನು ಹಾಳಾಗಿದೆ. 50 ಸಾವಿರ ಹೆಕ್ಟರ್ ತೋಟಗಾರಿಕಾ ಪ್ರದೇಶ ಕೂಡ ಹಾನಿಯಾಗಿದೆ.ಈ ಬಗ್ಗೆ ಜಂಟಿ ಸರ್ವೆ ಮಾಡಿ ಒಂದು ವಾರದೊಳಗೆ ಸರ್ವೆ ವರದಿ ಸಲ್ಲಿಸುವಂತೆ ಸೂಚಿಸಿದ್ದೇನೆ ಎಂದು ಡಿಸಿ ಜಿಲ್ಲಾ ಪಂಚಾಯತ್ ಸಿಇಓ ಗಳ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ (bele sala manna)ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ (Sala manna) ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.
ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.
ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ(Bele sala manna list) ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು/revenue department services" ಮೇಲೆ ಕ್ಲಿಕ್ ಮಾಡಿ
ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ - https://krushirushi.in/Tahasildar-varification-status-approved-1634
]]>
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
ಫ್ರುಟ್ಸ್ ನಲ್ಲಿ(FRUITS) ನೊಂದಣಿ ಮಾಡಿಕೊಳ್ಳದೇ ಇರುವ ರೈತರು ಕೂಡಲೆ ಫ್ರುಟ್ಸ್ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೆ ಫ್ರುಟ್ಸ್ನಲ್ಲಿ ನೊಂದಣಿ ಮಾಡಿಸಿಕೊಂಡವರು ಎಲ್ಲಾ ಸರ್ವೆ ನಂಬರ್(Survey number) ಗಳನ್ನು ನಿಮ್ಮ FIDಗೆ ಲಿಂಕ್ ಮಾಡಬೇಕು, ಅಂದರೆ ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 01 ಎಕರೆ ಮಾತ್ರ ನಮೂದಿಸಿರುತ್ತಾರೆ, ಅಂತಹವರಿಗೆ ಕೇವಲ 01 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ, ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ಪಹಣಿಯ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ (FRUITS) ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ(bele parihara) ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ ಪಾವತಿಯಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ (FRUITS)ನಲ್ಲಿ ನೊಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ನಿಮ್ಮ FID ಗೆ ಎಷ್ಟು ಸರ್ವೆ ನಂಬರ್ ಲಿಂಕ್ ಆಗಿದೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್(Aadhaar number) ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ password create ಮಾಡಿ
Mobile number,Create ಮಾಡಿದ password ಹಾಗೂ captcha code ಹಾಕಿ ಲಾಗಿನ್ ಮಾಡಿ
ನಂತರ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, Search ಮೇಲೆ ಕ್ಲಿಕ್ ಮಾಡಿ
ನಂತರ Registration status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ FIDಗೆ ಯಾವ ಯಾವ ಸರ್ವೆ ನಂಬರ್(Survey number) ಗಳನ್ನು ಸೇರಿಸಲಾಗಿದೆ ಎಂದು ತೋರಿಸುತ್ತದೆ
ನಿಮ್ಮ ಸರ್ವೆ ನಂಬರ್(Survey number) ಗಳು ನಿಮ್ಮ FIDಯಲ್ಲಿ ಸೇರಿಸದಿದ್ದರೆ,ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಬೇಟಿ ಕೊಟ್ಟು ನಿಮ್ಮ ಎಲ್ಲಾ ಸರ್ವೆ ನಂಬರ್ ಗಳನ್ನು ಸೇರಿಸಿಕೊಳ್ಳಿ.
ಶುಂಠಿ ಬೆಳೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಬೆಳೆವಿಮೆ ಹಣ ಜಮಾ(Belevime hana jama)ಮಾಡಲಾಗುತ್ತಿದ್ದು,ಕಳೆದ ಎರಡು ದಿನಗಳಿಂದ ಎಕರೆಗೆ 37,300 ರೂಪಾಯಿಯಂತೆ ರೈತರ ಖಾತೆಗೆ ಜಮಾ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ರಾಜ್ಯ ಸರ್ಕಾರವು ಸಾಮಾನ್ಯ ಜನರ ಮತ್ತು ಕೂಲಿ ಕಾರ್ಮಿಕರ ಏಳಿಗೆಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು (MGNAREGA)ಜಾರಿಗೆ ತಂದಿದ್ದಾರೆ.
ಮಹಾತ್ಮ ಗಾಂಧಿ ನರೇಗಾ ಯೋಜನೆ(NAREGA) ಅಡಿ ವೈಯಕ್ತಿಕ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಯ ಈ ಕೆಳಕಂಡ ವರ್ಗಗಳಲ್ಲಿ ಯಾವುದಾದರೂ ಒಂದು ವರ್ಗದಲ್ಲಿ ಅರ್ಹರಾಗಿರತಕ್ಕದ್ದು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ
ಅಲೆಮಾರಿ ಬುಡಕಟ್ಟುಗಳು
ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು
ಮಹಿಳಾ ಪ್ರಧಾನ ಕುಟುಂಬಗಳು
ವಿಕಲಚೇತನ ಕುಟುಂಬಗಳು
ಭೂ ಸುಧಾರಣಾ ಫಲಾನುಭವಿಗಳು
ವಸತಿ ಯೋಜನೆಗಳ ಫಲಾನುಭವಿಗಳು
ಅರಣ್ಯ ಹಕ್ಕು ಕಾಯಿದೆ 2006ರ ಫಲಾನುಭವಿಗಳು
ಸಣ್ಣ ಮತ್ತು ಅತಿ ಸಣ್ಣ ರೈತರು
ಇದನ್ನೂ ಓದಿ
1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming subsidy scheme Karnataka
https://krushirushi.in/Dairy-farming-subsidy-scheme-karnataka-1428
ಫಲಾನುಭವಿಯು ವೈಯಕ್ತಿಕ ಸೌಲಭ್ಯ ಪಡೆಯಲು
ಫಲಾನುಭವಿಯು ಕಡ್ಡಾಯವಾಗಿ ನರೇಗಾ ಯೋಜನೆಯ ಜಾಬ್ ಕಾರ್ಡ್(Job card) ಹೊಂದಿರಬೇಕು
ಫಲಾನುಭವಿಗೆ ನೀಡಲಾದ ವೈಯಕ್ತಿಕ ಕಾಮಗಾರಿಯಲ್ಲಿ ಆತನ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಾದರು ಕೆಲಸ ನಿರ್ವಹಿಸಬೇಕು
ನರೇಗಾ ಯೋಜನೆಯಡಿ ಫಲಾನುಭವಿಕೆ ನೀಡಬಹುದಾದ ವಯಕ್ತಿಕ ಕಾಮಗಾರಿಗಳ ಗರಿಷ್ಠ ಮಟ್ಟದ ಮಿತಿಯನ್ನು 2 ಲಕ್ಷಗಳಿಗೆ ನಿಗದಿಪಡಿಸಿ ಸದರಿ ಗರಿಷ್ಠ ಮೊತ್ತದ ಮಿತಿಯನ್ನು ಹೆಚ್ಚಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗಿರುತ್ತದೆ
ಯೋಜನೆ ಅಡಿ ನೊಂದಾಯಿತವಾದ ಒಂದು ವರ್ಷ ಕುಟುಂಬವು ತನ್ನ ಜೀವಿತಾವಧಿಯಲ್ಲಿ ಗರಿಷ್ಠ ಎರಡು ವರೆ ಲಕ್ಷದ ಗಳವರೆಗೆ ಯೋಜನೆ ಅಡಿ ನೀಡಲಾಗುವ ವೈಯಕ್ತಿಕ ಕಾಮಗಾರಿಗಳನ್ನು ಪಡೆದುಕೊಳ್ಳಬಹುದಾಗಿದೆ
ನರೇಗಾ ಯೋಜನೆಯಡಿ ಕೃಷಿಹೊಂಡ ನಿರ್ಮಾಣ
ನರೇಗಾ ಯೋಜನೆ ಅಡಿ ಅರ್ಹ ಫಲಾನುಭವಿಯು ಯೋಜನೆ ಅಡಿ ನಿರ್ಮಿಸಿಕೊಂಡ ಕೃಷಿಹೊಂಡ ಕಾಮಗಾರಿಯನ್ನು ಮುಂದಿನ ಐದು ವರ್ಷಗಳವರೆಗೆ ಮುಚ್ಚತಕ್ಕದ್ದಲ್ಲ.
ಒಂದು ವೇಳೆ ಫಲಾನುಭವಿಯು ಕೃಷಿ ಹೊಂಡವನ್ನು ಮುಚ್ಚಿದ್ದಲ್ಲಿ ಕೃಷಿಹೊಂಡ ನಿರ್ಮಾಣಕ್ಕಾಗಿ ತಗಲಿದ ವೆಚ್ಚ ಹಾಗೂ ಶೇಕಡ 18ರಷ್ಟು ಬಡ್ಡಿ ಸೇರಿ ಸರ್ಕಾರಕ್ಕೆ ಬರಣ ಮಾಡತಕ್ಕದ್ದು
ಕೃಷಿ ಹೊಂಡ ನಿರ್ಮಾಣ ಕಾಮಗಾರಿಯನ್ನು ಅನುಷ್ಠಾನಗೊಳಿಸುವ ಮುಂಚೆ ಫಲಾನುಭವಿಗಳಿಂದ ಮುಚ್ಚಳಿಕೆ ಪತ್ರವನ್ನು ಕಡ್ಡಾಯವಾಗಿ ಪಡೆಯತಕ್ಕದ್ದು
ಕೃಷಿ ಹೊಂಡ ಕಾಮಗಾರಿಗಳ ಕ್ರಿಯಾಯೋಜನೆಯನ್ನು ಅನುಮೋದನೆಗಾಗಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸುವಾಗ ಮುತ್ತಳಿಕೆ ಪತ್ರದ ಪ್ರತಿಯನ್ನು ಲಗತ್ತಿಸುವುದು
ಕಾಮಗಾರಿಗಳ ಆಯ್ಕೆ ಮಾಡುವಾಗ ತಾಂತ್ರಿಕವಾಗಿ ಸೈಟ್ ಫೀಸಿಬಿಲಿಟಿ ಇರುವುದನ್ನ ಖಚಿತಪಡಿಸಿಕೊಳ್ಳುವುದು
ಕೃಷಿಹೊಂಡ ಕಾಮಗಾರಿಯ ಅನುಮೋದನೆಯಾದ ಆರ್ಥಿಕ ವರ್ಷದಲ್ಲಿಯೇ ಕಡ್ಡಾಯವಾಗಿ ಪೂರ್ಣಗೊಳಿಸುವುದು
ಅನುಷ್ಠಾನಗೊಳಿಸುವಾಗ ಮೂರು ಹಂತದ Geo Tag ಮಾಡುವ ಪ್ರಕ್ರಿಯೆಯನ್ನು ನಿಗದಿ ಅವಧಿಯೊಳಗೆ ಪೂರ್ಣಗೊಳಿಸುವುದು ಕಡ್ಡಾಯವಾಗಿರುತ್ತದೆ
ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಸಿಟಿಜನ್ ಇನ್ಫಾರ್ಮಶನ್ ಬೋರ್ಡ್ ಅಳವಡಿಸತಕ್ಕದ್ದು.
ದನದ ಶೆಡ್ ನಿರ್ಮಾಣಕ್ಕೆ 57,000 ಸಹಾಯಧನ
ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ದನಗಳ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ಯ ಇಲಾಖೆಗಳು ಮೊದಲು ನೀಡುತ್ತಿರುವ ಸಹಾಯಧನವನ್ನು ಹೆಚ್ಚಳ ಮಾಡಿ, ರಾಜ್ಯದ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿಯನ್ನು ನೀಡಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಅಂದರೆ 2022ರ ಸಾಲಿನ ಏಪ್ರಿಲ್ 1 ರಿಂದ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೂಲಿ ಕಾರ್ಮಿಕರ ಮೊತ್ತವನ್ನು ರೂಪಾಯಿ 289ರೂ.ನಿಂದ ರೂಪಾಯಿ 309ರೂ.ವರೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಮಿಕರ ಕೂಲಿ ಮೊತ್ತವನ್ನು ಹೆಚ್ಚಿಸಿ ಕೂಲಿಕಾರರಿಗೆ ಸಿಹಿಸುದ್ದಿ ನೀಡಿದೆ.
ರೈತರಿಗೆ ದನದ ಕೊಟ್ಟಿಗೆ(Danada shed) ಅಥವಾ ಶೆಡ್ ನಿರ್ಮಾಣದ ಬಗ್ಗೆ ಅಂದರೆ ಯಾರು ಹಸುಗಳು ಅಥವಾ ಎಮ್ಮೆಗಳನ್ನು ಸಾಕಿದ್ದಾರೋ ಅಥವಾ ನಿಮ್ಮ ಮನೆಯಲ್ಲಿ ಅಥವಾ ನಿಮ್ಮ ಮನೆ ಹಿಂದೆ ಇರುವ ಜಾಗದಲ್ಲಿ ಅಥವಾ ಎಲ್ಲಿ ನಿಮಗೆ ಸಂತ ಜಾಗವಿದೆಯೋ ಅಲ್ಲಿ ನೀವು ದನದ ಕೊಟ್ಟಿಗೆ ಅಥವಾ ದನದ ಶೆಡ್ ಅನ್ನು ನಿರ್ಮಾಣ ಮಾಡಲು ಪಂಚಾಯಿತಿ ವತಿಯಿಂದ ರೈತರಿಗೆ ಮತ್ತು ಆಸಕ್ತರಿಗೆ ಸಹಾಯಧನ ನೀಡಲಾಗುತ್ತದೆ.
ಸಾಮಾನ್ಯ ವರ್ಗದ ಜನರಿಗೆ ಸರಿ ಸುಮಾರು ರೂಪಾಯಿ 20,000 ರೂಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ವತಿಯಿಂದ ಅದನ್ನು ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸುಮಾರು 43,000ರೂಗಳ ಸಹಾಯಧನವನ್ನು ಈ ರಾಜ್ಯ ಸರ್ಕಾರದ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಪಂಚಾಯಿತಿ ಕಡೆಯಿಂದ ನೀಡುವ ಈ ಒಟ್ಟು ಮೊತ್ತದಲ್ಲಿ ಅಂದರೆ ಈ 43,000ರೂ.ಗಳಲ್ಲಿ, ಫಲಾನುಭವಿ ರೈತರಿಗೆ ಸುಮಾರು 8,996ರೂ.ಗಳನ್ನು ಅವರ ಕೂಲಿ ಮೊತ್ತವಾಗಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಈ ಸಹಾಯಧನವನ್ನು ನರೇಗಾ ಕಾರ್ಡ್ ಹೊಂದಿರುವ ರೈತರಿಗೆ ಅಥವಾ ಅರ್ಜಿದಾರರಿಗೆ ಮಾತ್ರ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಶೆಡ್ ಅಥವಾ ದನದ ಕೊಟ್ಟಿಗೆ ನಿರ್ಮಾಣ ಮಾಡಲಿಕ್ಕೆ ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಉಳಿದ ಮೊತ್ತವನ್ನು ಅಂದರೆ ಉಳಿದ 34,000ರೂ.ಗಳನ್ನು ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಾಮಾನ್ಯ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಇದರ ಅರ್ಧ ಮೊತ್ತ ಸಿಗುತ್ತಿತ್ತು. ಅಂದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ರೂಪಾಯಿ 8,996ರೂ.ಗಳ ಕೂಲಿಯನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಲ್ಲರಿಗೂ ಸಮಾನವಾದ ಕೂಲಿಯನ್ನು ನೀಡಲಾಗುತ್ತದೆ.
ಆದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಿಗುವ ಉಳಿದ 34,000ರೂ.ಗಳ ಹಣದಲ್ಲಿ ಸಾಮಾನ್ಯ್ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಈ 34,000ರೂ.ಗಳಲ್ಲಿ ಕೇವಲ ಅರ್ಧ ಮೊತ್ತವನ್ನು ನೀಡಲಾಗುತ್ತಿತ್ತು.
ಅಂದರೆ ಸರಿಸುಮಾರು 20,000ರೂ.ಗಳನ್ನು ಸಾಮಾನ್ಯ ವರ್ಗದವರಿಗೆ ಅಥವಾ ಜನರಲ್ ಕೆಟಗರಿಯವರಿಗೆ ಈ ಯೋಜನೆಯ ಅಡಿಯಲ್ಲಿ ಪಂಚಾಯಿತಿಯ ಕಡೆಯಿಂದ ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭ್ಯರ್ಥಿಗಳಿಗೆ ರೂಪಾಯಿ 43,000ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ.
ರೈತರು ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ದನದ ಕೊಟ್ಟಿಗೆ ಅಥವಾ ಶೆಡ್ ನ ಅಳತೆ ಎಷ್ಟಿರಬೇಕು?
• ರೈತರು ಈ ಯೋಜಯಡಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ಕಟ್ಟುವ ದನದ ಕೊಟ್ಟಿಗೆ ಅಥವಾ ಶೆಡ್ 5 ಫೀಟ್ ಎತ್ತರದ ಗೋಡೆಯನ್ನು ಹೊಂದಿರಬೇಕು.
• ಹಸುಗಳಿಗೆ ಮೇವು ಹಾಗೂ ನೀರಿನ ವ್ಯವಸ್ಥೆಗಾಗಿ ಗೋದಲಿಯನ್ನು ನಿರ್ಮಾಣ ಮಾಡಿರಬೇಕು.
• ಜಾನುವಾರುಗಳಿಗೆ ಶೆಡ್ ನಲ್ಲಿ ಗಾಳಿ ಮತ್ತು ಬೆಳಕು ಆಡಲು ಕೊಟ್ಟಿಗೆಗೆ ಶೆಡ್ ಶೀಟ್ಗಳನ್ನು ಹಾಕಬೇಕು.
•ಇವೆಲ್ಲವುದರ ಜೊತೆಗೆ ನೀವು ಈ ಯೋಜನೆಯಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನರೇಗಾ ನಾಮಫಲಕವನ್ನು ಕಡ್ಡಾಯವಾಗಿ ಹಾಕಬೇಕಾಗಿರುತ್ತದೆ.
• ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಿಕೊಳ್ಳಲು ರೈತರು ಮೊದಲನೆಯದಾಗಿ ತಮಗೆ ಸಂಬಂಧಪಟ್ಟ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ. ಅಂದರೆ ಈ ಯೋಜನೆಯಡಿಯಲ್ಲಿ ಯಾರ್ಯಾರು ಸಹಾಯ ಧನವನ್ನು ಪಡೆಯಬೇಕೆಂದು ಕೊಂಡಿದ್ದರೋ ಅಥವಾ ಈ ಯೋಜನೆಯ ಫಲಾನುಭವಿಯಾಗಲು ಬಯಸುವಂತಹ ಅರ್ಜಿದಾರರು ತಮ್ಮ ಹೆಸರನ್ನು ನಿಮಗೆ ಹತ್ತಿರವಿರುವ ಅಥವಾ ನಿಮಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಬೇಕಾಗಿರುತ್ತದೆ.
• ಪ್ರತಿವರ್ಷ ಜಾರಿಗೊಳಿಸುವ ಈ ಯೋಜನೆಯಲ್ಲಿ ನಿಮ್ಮ ಹೆಸರನ್ನು ಸೇರಿಸಬೇಕು. ಅಂದಾಗ ಮಾತ್ರ ನೀವು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
• ಇದಾದನಂತರ ಸಂಬಂಧಪಟ್ಟ ಪಂಚಾಯಿತಿಯ ಅಧಿಕಾರಿಗಳು ಬಂದು ನೀವು ದನದ ಕೊಟ್ಟಿಗೆ ಅಥವಾ ಶೆಡ್ಕಟ್ಟಬೇಕೆಂದು ಕೊಂಡಿರುವ ಖಾಲಿ ಜಾಗಕ್ಕೆ ಬಂದು ಭೇಟಿ ನೀಡಿ, ಆ ಜಾಗದ GPS ಅನ್ನು ಮಾಡಿ, ಆ ಜಾಗದ ಸರ್ವೆ ಮಾಡಿ ನಿಮಗೆ ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಅನುಮತಿಯನ್ನು ನೀಡುತ್ತಾರೆ.
• ಅದಾದ ನಂತರ ನೀವು ಕೊಟ್ಟಿಗೆ ಕಟ್ಟಲು ಬೇಕಾಗುವ ಸಾಮಗ್ರಿಗಳನ್ನು ಪಂಚಾಯಿತಿ ನೀಡುವ ಸಹಾಯಧನದಲ್ಲಿ ತಂದು ನಿಮ್ಮ ಕೊಟ್ಟಿಗೆ ಕಟ್ಟುವ ಕೆಲಸವನ್ನು ಪ್ರಾರಂಭಿಸಬಹುದು.
• ನೀವು ಕೊಟ್ಟಿಗೆ ಕಟ್ಟುವ ಕೆಲಸವನ್ನು ಶುರು ಮಾಡುವ ಮೊದಲು ಒಂದು ಕಲ್ಲಿನ ಬೋರ್ಡನ್ನು ಅಂದರೆ ನರೇಗಾ ನಾಮಫಲಕವನ್ನು ಬರೆಸಬೇಕಾಗಿರುತ್ತದೆ.
ಈ ಬೋರ್ಡ್ ನೀವು ಯಾವ ಯೋಜನೆಯಡಿ ಈ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದೀರಿ.ಎಂಬುದನ್
ಇದರಲ್ಲಿ ನೀವು ಯೋಜನೆ ಪಡೆಯುತ್ತಿರುವ ವರ್ಷ, ಗ್ರಾಮ ಪಂಚಾಯಿತಿ ಹೆಸರು, ತಾಲೂಕು ಮತ್ತು ಜಿಲ್ಲೆಯನ್ನು ಒಳಗೊಂಡಿರುತ್ತದೆ.
ಈ ನರೇಗಾ ನಾಮಫಲಕಾದಲ್ಲಿ ಫಲಾನುಭವಿಯ ಹೆಸರು ನಮೂದಿಸಲಾಗಿರುತ್ತದೆ.
ಹಾಗೂ ಅದೇ ರೀತಿ ಫಲಾನುಭವಿಯು ಈ ನರೇಗಾ ಉದ್ಯೋಗ ಖಾತರಿ ಯೋಜನೆಯನ್ನು ಪಡೆದುಕೊಳ್ಳುತ್ತಿರುವ ಕಾಮಗಾರಿ ಸಂಕೇತವನ್ನು ಒಳಗೊಂಡಿರುತ್ತದೆ.
ಈ ನರೇಗಾ ನಾಮಫಕದಲ್ಲಿ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಒಟ್ಟು ಬಿಡುಗಡೆಯಾದ ಮೊತ್ತ, ಎಷ್ಟು ಬಿಡುಗಡೆಯಾಗಿದೆ? ಯಾವುದಕ್ಕೆಲ್ಲ ಬಿಡುಗಡೆಯಾಗಿದೆ? ಖರ್ಚಾದ ಮೊತ್ತ ಮತ್ತು ಕೊಟ್ಟಿಗೆ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳ ಮೊತ್ತ, ಎಲ್ಲವನ್ನು ಒಳಗೊಂಡಿರುತ್ತದೆ.
ನರೇಗಾ ಯೋಜನೆಯ ಅಡಿಯಲ್ಲಿ ಸಹಾಯಧನ ಪಡೆದುಕೊಳ್ಳಲು ದನದ ಕೊಟ್ಟಿಗೆ ಹೇಗಿರಬೇಕು? ಅದರ ಉದ್ದ ಮತ್ತು ಅಳತೆಗಳು ಎಷ್ಟಿರಬೇಕು?
* ದನದ ಕೊಟ್ಟಿಗೆಯ ಅಗಲವು ಸುಮಾರು ನಾಲ್ಕು ಮೀಟರುಗಳಷ್ಟು ಇರಬೇಕು.
* ದನದ ಕೊಟ್ಟಿಗೆ ಅಥವಾ ಶೆಡ್ನ ಉದ್ದವು ಏಳು ಮೀಟರ್ಗಳಷ್ಟು ಇರಬೇಕು.
*ಅಂದರೆ ಸಾಮಾನ್ಯವಾಗಿ 22 ಅಡಿ ಉದ್ದ ಮತ್ತು13 ಅಡಿ ಅಗಲವನ್ನು ಹೊಂದಿರಬೇಕಾಗುತ್ತದೆ.
* ದನದ ಕೊಟ್ಟಿಗೆಯು ಕನಿಷ್ಠ ಅಗಲ ಮತ್ತು ಉದ್ದವಗಳನ್ನು ಹೊಂದಿರಬೇಕಾಗುತ್ತದೆ.
* ಇದಕ್ಕಿಂತ ಕಡಿಮೆ ಉದ್ದ ಮತ್ತು ಅಗಲಗಳ ಅಳತೆಗಳನ್ನು ಹೊಂದಿದ್ದರೆ ನಿಮಗೆ ಸಿಗುವ ಸಹಾಯಧನದಲ್ಲಿ ಮೊತ್ತವು ಕಡಿಮೆಯಾಗುತ್ತದೆ. ಅಂದರೆ ನಿಮಗೆ ಸಿಗುತ್ತಿರುವ ಸಾಮಗ್ರಿ ಮೊತ್ತದಲ್ಲಿ ಸಹಾಯಧನ ಕಡಿಮೆಯಾಗುತ್ತದೆ.
* ಇದಕ್ಕಿಂತ ಜಾಸ್ತಿ ಉದ್ದ ಮತ್ತು ಅಗಲಗಳನ್ನು ಹೊಂದಿರಬಹುದು. ಆದರೆ ಈ ಕನಿಷ್ಠ ಅಳತೆಗಳ ಕೆಳಗೆ ಅಳತೆಗಳನ್ನು ಹೊಂದಿರಬಾರದು.
* ದನದ ಕೊಟ್ಟಿಗೆ ನಿರ್ಮಾಣದ ಸಮಯದಲ್ಲಿ ದನಗಳನ್ನು ಕಟ್ಟುವ ಜಾಗದಲ್ಲಿ ನೆಲವನ್ನು ಕಾಂಕ್ರೀಟ್ ನಿಂದ ಮಾಡಿರಬೇಕಾಗಿರುತ್ತದೆ. ಯಾವುದೇ ತರದ ಚಪ್ಪಡಿ ಕಲ್ಲುಗಳನ್ನು ಮತ್ತು ಇನ್ನಿತರೆ ರಬ್ಬರ್ ಮ್ಯಾಟ್ ಅಥವಾ ನೆಲಹಾಸುಗಳನ್ನು ಬಳಸುವಂತಿಲ್ಲ. ನೀವು ನೆಲವನ್ನು ಕಾಂಕ್ರಿಟ್ ನಿಂದ ಮಾಡಿರದಿದ್ದರೆ ನಿಮಗೆ ಸಹಾಯಧನವನ್ನು ನೀಡಲು ಬರುವುದಿಲ್ಲ.
ಮೊದಲು ನೀವು ದನದ ಕೊಟ್ಟಿಗೆ ನಿರ್ಮಾಣ ಮಾಡಬೇಕೆಂದುಕೊಳ್ಳುವ ಖಾಲಿ ಜಾಗದಲ್ಲಿ ಫೋಟೋ ತೆಗೆಯಬೇಕು. ನಂತರ 40MM ಜೆಲ್ಲಿ ಕಲ್ಲು ಅಂದರೆ(ಕಡಿಗಳು) ಗಳನ್ನು ಹಾಕಿ ಸಮತಟ್ಟು ಮಾಡಬೇಕಾಗಿರುತ್ತದೆ. ಇದಾದ ನಂತರ ಅದರ ಮೇಲೆ ಕಾಂಕ್ರೆಟ್ ನಿಂದ ನೆಲವನ್ನು ಮುಚ್ಚಬೇಕಾಗುತ್ತದೆ.
* ದನಗಳ ಕೊಟ್ಟಿಗೆಯಲ್ಲಿ ಮೇವು ಅಥವಾ ನೀರಿನ ಸೌಲಭ್ಯಕ್ಕಾಗಿ ಗೋದಲಿಯನ್ನು ಇಟ್ಟಿಗೆಯನ್ನು ಬಳಸಿ ಕಟ್ಟಬೇಕು. ಕಟ್ಟಿದ ನಂತರ ಇಟ್ಟಿಗೆಗಳನ್ನು ಪ್ಲಾಸ್ಟರ್ ನಿಂದ ಮುಚ್ಚಬೇಕು.
* ಹಾಗೆಯೇ ದನಗಳನ್ನು ಗೋದಲಿಗೆ ಕಟ್ಟಲು ಕಬ್ಬಿಣದ ಬಳೆಗಳನ್ನು ಸಹ ಬಳಸಬಹುದು.
* ದನಗಳ ಮೂತ್ರ ಮತ್ತು ಕೊಟ್ಟಿಗೆ ತೊಳೆದ ನಂತರ ಅದರ ನೀರು ಸುಲಭವಾಗಿ ಹೋಗಲು ಒಂದು ಗುಂಡಿ ಅಥವಾ ಒಂದು ಚರಂಡಿ ವ್ಯವಸ್ಥೆಯನ್ನು ಮಾಡಬೇಕಾಗಿರುತ್ತದೆ. ಅಥವಾ ನಿಮಗೆ ಚರಂಡಿ ವ್ಯವಸ್ಥೆ ಇಲ್ಲದಿದ್ದಲ್ಲಿ ನೀರನ್ನು ಇಂಗು ಗುಂಡಿಗೆ ಬಿಡಬಹುದು.
* ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ದನದ ಕೊಟ್ಟಿಗೆಯ ಸುತ್ತಲೂ ಗೋಡೆಯನ್ನು ಕಟ್ಟಬೇಕಾಗುತ್ತದೆ.
* ಈ ಕೊಟ್ಟಿಗೆಯನ್ನ ನಿರ್ಮಾಣ ಮಾಡಲು ಸಾಮಾನ್ಯವಾಗಿ 22,000ರೂ.ಗಳ ಖರ್ಚು ಬರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಒಟ್ಟು ಸಹಾಯಧನ 43,000ರೂ.ಗಳು ಬರುತ್ತದೆ.
ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನ ಹೆಚ್ಚಳ ಮಾಡಿದ ನಂತರ ಒಟ್ಟು ಸಹಾಯಧನವಾಗಿ 57,000 ರೂ ಸಿಗುತ್ತದೆ. ಈ ಮೊತ್ತವನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೂ ಸಮವಾಗಿ ನೀಡಲಾಗುತ್ತದೆ. ಈ ಮೊತ್ತದಲ್ಲಿ ಅಂದರೆ ಒಟ್ಟಾರೆ 57,000ರೂ.ಗಳಲ್ಲಿ ಸರಿ ಸುಮಾರು 10,556ರೂ.ಗಳನ್ನು ಕೂಲಿ ಮೊತ್ತವಾಗಿ ಈ ಯೋಜನೆಯಡಿ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಸುಮಾರು 46,644ರೂ.ಗಳನ್ನು ಈ ಯೋಜನೆಯಡಿಯಲ್ಲಿ ದನದ ಕೊಟ್ಟಿಗೆ ಅಥವಾ ದನದಶೆಡ್ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಈ ಯೋಜನೆಯ ಅಡಿಯಲ್ಲಿ ಸಹಾಯಧನ ನೀಡಲಾಗುತ್ತದೆ.
ಫಲಾನುಭವಿಗಳು ಜಾನುವಾರು ಶೆಡ್ ಅಥವಾ ಕೊಟ್ಟಿಗೆಯನ್ನು ನಿರ್ಮಿಸಿಕೊಳ್ಳಲು,
#ಕನಿಷ್ಠ 4 ಜಾನುವಾರುಗಳನ್ನು ಹೊಂದಿರಬೇಕು.
#ಸಂಬಂಧಪಟ್ಟ ಪಶುವೈದ್ಯಾಧಿಕಾರಿಗಳಿಂದ ಜಾನುವಾರು ಇರುವ ಕುರಿತ ದೃಢೀಕರಣ ಪತ್ರವನ್ನು ಪಡೆಯಬೇಕು.
#ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಉದ್ಯೋಗ ಖಾತರಿ ಚೀಟಿ ಪುಸ್ತಕವನ್ನು ಹೊಂದಿರಬೇಕು.
#ಈ ಮೇಲಿನ ಉಲ್ಲೇಕಿಸಿದ ದಾಖಲಾತಿಗಳೊಂದಿಗೆ ಸ್ಥಳೀಯ ಗ್ರಾಮ ಪಂಚಾಯತಿಗೆ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
# ಗ್ರಾಮ ಪಂಚಾಯಿತಿಯವರ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಫಲಾನುಭವಿಯ ಹೆಸರು ಸೇರಿಸಿಕೊಂಡು ಮೇಲಾಧಿಕಾರಿಗಳಿಂದ ಅನುಮೋದನೆ ಪಡೆದ ನಂತರ ರೈತರು ಅವರ ದನದ ಕೊಟ್ಟಿಗೆಯ ಕಾಮಗಾರಿಯನ್ನು ಪ್ರಾರಂಭಿಸಬೇಕು.
# ಈ ಹಿಂದೆ ಉದ್ಯೋಗ ಖಾತರಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 43,000ರೂ.ಗಳ ಸಹಾಯಧನ ಹಾಗೂ ಸಾಮಾನ್ಯ ವರ್ಗದವರಿಗೆ 19,000 ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನೀಡಲಾಗುತ್ತಿತ್ತು.
ಈ ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚಿಸಿದ ಸಹಾಯಧನದ ಬಗ್ಗೆ ತಿಳಿಯಬೇಕೆಂದರೆ,
ಸಾಮಾನ್ಯ ವರ್ಗದವರಿಗೂ ಸಹ 57,000ರೂ.ಗಳ ಸಹಾಯಧನ ಈ ಯೋಜನೆ ಅಡಿಯಲ್ಲಿ ನೀಡಲಾಗುವುದು. ಸಾಮಾನ್ಯವಾಗಿ 4 ಕ್ಕಿಂತ ಹೆಚ್ಚು ಜಾನುವಾರು ಸಾಕಣೆ ಮಾಡುವವರು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.
ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಜಾನುವಾರು ಸೆಡ್ ನಿರ್ಮಾಣಕ್ಕೆ ಸಹಾಯಧನದ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ರಾಜ್ಯದಲ್ಲಿ ಈ ಯೋಜನೆಯ ಲಾಭವನ್ನು ಪಡೆದುಕೊಂಡು ಸಹಸ್ರಾರು ಕುಟುಂಬಗಳು ಶೆಡ್ ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡು ಜಾನುವಾರು ಸಾಕಣೆಯೊಂದಿಗೆ ಉತ್ತಮ ಆದಾಯ ಮಾಡಿಕೊಳ್ಳುತ್ತಿದ್ದಾರೆ.
ಇದೀಗ ದನದ ಶೆಡ್ ನಿರ್ಮಾಣ ಮಾಡಿಕೊಳ್ಳಲು ಸಹಾಯ ಧನ ಹೆಚ್ಚಿಸಿದೆ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಅಥವಾ ಸಂಬಂಧಪಟ್ಟ ಪಂಚಾಯಿತಿಯನ್ನು ಸಂಪರ್ಕಿಸಿರಿ.
]]>
ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ (FRUITS ID) ಪ್ರೊಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ(Parihara Portal) ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ(Direct benefit transfer) ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುದು.
ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.
ಬೆಳೆ ಹಾನಿ ಪರಿಹಾರ(Bele hani parihara) ಪಡೆದುಕೊಳ್ಳಲು (FRUITS ID) ಪ್ರೊಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೊಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ (FRUITS ID) ಪ್ರೊಟ್ಸ್ ಐಡಿ ಸೃಜಿಸಿಕೊಳ್ಳಬಹುದು. (FRUITS ID) ಪ್ರೊಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.
ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್/Aadhaar number ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ
ರಾಜ್ಯದಲ್ಲಿ ಅಕ್ರಮ ರೇಷನ್ ಕಾರ್ಡ್ದಾರರ(fake ration card) ಸಂಖ್ಯೆ ಹೆಚ್ಚಳವಾಗಿದೆ. ಆಹಾರ ಇಲಾಖೆಯು 10 ಲಕ್ಷ ಕಾರ್ಡ್ಗಳನ್ನು ಪತ್ತೆ ಮಾಡಿದ್ದು, ಇದರಲ್ಲಿ ಶ್ರೀಮಂತರು, 4 ಸಾವಿರ ಸರ್ಕಾರಿ ನೌಕರರು ಇದ್ದಾರೆ. ಯಾರೆಲ್ಲಾ ಅನರ್ಹವಾಗುತ್ತಾರೆ? ಏನೆಲ್ಲಾ ನಿಯಮಗಳಿವೆ? ಎಷ್ಟು ದಂಡ ಹಾಕಲಾಗುತ್ತದೆ? ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ರಾಜ್ಯದಲ್ಲಿ ಅಕ್ರಮ ದಾಖಲೆ ನೀಡಿ ಬಿಪಿಎಲ್ ಪಡಿತರ ಚೀಟಿ(Bpl ration card) ಪಡೆದುಕೊಂಡಿರುವವರ ಪತ್ತೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ಅಧಿಕಾರಿಗಳು ಸಮರ ಸಾರಿದ್ದಾರೆ.
ರಾಜ್ಯದಲ್ಲಿ 10,97,621 ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆಯಾಗಿದೆ. ಈ ಪೈಕಿ 98,431 ಮಂದಿ ಆದಾಯ ತೆರಿಗೆ ಪಾವತಿದಾರರು, 10,04,716 ಮಂದಿ 1.20 ಲಕ್ಷ ರೂ.ಗೂ ಅಧಿಕ ಆದಾಯ ಹೊಂದಿರುವವರು, 4,036 ಮಂದಿ ಸರ್ಕಾರಿ ನೌಕರರಿರುವುದು ಇಲಾಖೆಯ ದಾಖಲೆಯಲ್ಲಿದೆ.
ದಶಕಗಳಿಂದೀಚೆಗೆ ಬಿಪಿಎಲ್ ಕಾರ್ಡ್ ರಾಜ್ಯಾದ್ಯಂತ ವಿಪರೀತ ಏರಿಕೆಯಾಗಿದ್ದು, ಇದು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ತಿಂಗಳಿಗೆ ಕೋಟ್ಯಂತರ ರೂ. ಹೊರೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಅಕ್ರಮ ಬಿಪಿಎಲ್ ಕಾರ್ಡ್ಗಳ ಪತ್ತೆಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.
ಯಾವುದೇ ಕುಟುಂಬದಲ್ಲಿ ಸರ್ಕಾರಿ , ಅರೆ ಸರ್ಕಾರಿ ನೌಕರರಿದ್ದಲ್ಲಿ, ತೆರಿಗೆ ಪಾವತಿದಾರರಿದ್ದಲ್ಲಿ, 4 ಚಕ್ರದ ಬಿಳಿ ಬೋರ್ಡ್ ವಾಹನ ಹೊಂದಿದವರು, ಆದಾಯ ತೆರಿಗೆ ಪಾವತಿಸುವ ಕುಟುಂಬ, ಒಂದೇ ಮನೆಯಲ್ಲಿ ವಾಸವಿದ್ದು ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿದ್ದರೆ, 7.5 ಎಕರೆಗಿಂತ ಹೆಚ್ಚಿನ ಡಿ ವರ್ಗದ ಅಥವಾ ತತ್ಸಮಾನ ಭೂಮಿ ಹೊಂದಿದ್ದರೆ, ವಾರ್ಷಿಕ 1,20,000 ರೂ.ಗಿಂತ ಹೆಚ್ಚು ಆದಾಯ ಹೊಂದಿದ್ದರೆ, ನಗರ ಪ್ರದೇಶದಲ್ಲಿ 1,000 ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಪಕ್ಕಾ ಮನೆ ಹೊಂದಿರುವ ಕುಟುಂಬ ಬಿಪಿಎಲ್ ಪಡೆಯಲು ಅವಕಾಶವಿಲ್ಲ. ಈ ಮಾನದಂಡ ಉಲ್ಲಂಘಿಸಿ ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ. ಇದರಲ್ಲಿ ರಾಜ್ಯ, ಕೇಂದ್ರ ಸರ್ಕಾರಿ ನೌಕರರು, ಅರೆ ಸರ್ಕಾರಿ ನೌಕರರು ಅಕ್ರಮವಾಗಿ ಬಿಪಿಎಲ್ ಪಡೆಯುತ್ತಿರುವುದು ಪತ್ತೆಯಾಗಿದೆ.
ಕಲಬುರಗಿ ಹೆಚ್ಚು! ಚಿಕ್ಕಬಳ್ಳಾಪುರ ಕಡಿಮೆ
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಪಡೆದ ಜಿಲ್ಲೆಗಳ ಪೈಕಿ ಕಲಬುರಗಿ ಜಿಲ್ಲೆ (78,058 ) ಯಲ್ಲಿ ಅತಿ ಹೆಚ್ಚಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆ ಅತೀ ಕಡಿಮೆ (8,346) ಸಂಖ್ಯೆ ಹೊಂದಿದೆ. ರಾಜ್ಯದಲ್ಲಿ 50 ಸಾವಿರಕ್ಕೂ ಅಧಿಕ ಅಕ್ರಮ ಬಿಪಿಎಲ್ ಕಾರ್ಡ್ ಇರುವ ಜಿಲ್ಲೆಗಳಲ್ಲಿ ಬೆಳಗಾವಿ, ಬೆಂಗಳೂರು, ಬೀದರ್, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕಲಬುರಗಿ, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿವೆ. 10 ಸಾವಿರಕ್ಕಿಂತ ಕಡಿಮೆ ಅಕ್ರಮ ಬಿಪಿಎಲ್ ಕಾರ್ಡ್ ಪಡೆದ ಜಿಲ್ಲೆಗಳಲ್ಲಿ ಬೆಂಗಳೂರು ಪೂರ್ವ, ಚಿಕ್ಕಬಳ್ಳಾಪುರ, ಕೊಪ್ಪಳ, ಯಾದಗಿರಿ ಜಿಲ್ಲೆಗಳಿವೆ.
4 ಸಾವಿರ ಸರ್ಕಾರಿ ಉದ್ಯೋಗಿಗಳು
ಅಕ್ರಮ ಕಾರ್ಡ್ ಪಡೆದವರಲ್ಲಿ 4,036 ಮಂದಿ ಸರ್ಕಾರಿ ಉದ್ಯೋಗಿಗಳಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ 369 ಸರ್ಕಾರಿ ಉದ್ಯೋಗಿಗಳು ಅಕ್ರಮವಾಗಿ ಬಿಪಿಎಲ್ ಪಡೆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಮಂದಿ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಬಾಗಲಕೋಟೆ, ಬೆಳಗಾವಿ, ಬೆಂಗಳೂರು, ಕಲಬುರಗಿ, ರಾಯಚೂರು, ತುಮಕೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ತಲಾ 150ಕ್ಕೂ ಅಧಿಕ ಸರ್ಕಾರಿ ಉದ್ಯೋಗಿಗಳು ಅಕ್ರಮವಾಗಿ ಬಿಪಿಎಲ್(BPL) ಪಡೆದಿದ್ದಾರೆ.
ಅಕ್ರಮ ಪಡಿತರ ಪಡೆದವರ ದಂಡ ಪ್ರಯೋಗ
ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ಉದ್ಯೋಗಿಗಳು ಸೇರಿದಂತೆ ಮಾನದಂಡಗಳನ್ನು ಮೀರಿ ಬಿಪಿಎಲ್ ಕಾರ್ಡ್ ಪಡೆದುಕೊಂಡು ಸರಕಾರಕ್ಕೆ ಪರೋಕ್ಷವಾಗಿ ದೋಖಾ ಮಾಡಿದವರನ್ನು ಪತ್ತೆ ಹಚ್ಚಿ ದಂಡ ವಿಧಿಸಲು ಸರಕಾರ ತೀರ್ಮಾನಿಸಿದೆ. ಬಿಪಿಎಲ್ ಅಕ್ರಮ ಪಡೆದವರು ಯಾವ ವರ್ಷ, ಯಾವ ದಿನಾಂಕದಿಂದ ಅಕ್ರಮ ಪತ್ತೆಯಾಗುವವರೆಗೆ ನಿರಂತರ ಪಡಿತರ ಪಡೆದುಕೊಂಡಿದ್ದಾರೆ ಎಂಬ ಲೆಕ್ಕಾಚಾರ ಮಾಡಿ (ಕೆಜಿಗೆ 34 ರೂ.) ಅವರ ಮೇಲೆ ದಂಡ ಪ್ರಯೋಗ ಮಾಡಲು ನಿರ್ದೇಶನ ನೀಡಲಾಗಿದೆ. ಇದರಿಂದ 5ಕ್ಕೂ ಅಧಿಕ ವರ್ಷಗಳಿಂದ ಅಕ್ರಮ ಬಿಪಿಎಲ್ ಪಡೆದವರು ಭಾರಿ ದೊಡ್ಡ ಮೊತ್ತವನ್ನೇ ದಂಡವಾಗಿ ಕಟ್ಟಬೇಕಾಗಿದೆ ಎನ್ನುತ್ತಾರೆ ಹಿರಿಯ ಅಧಿಕಾರಿಗಳು.
ಕಾರು ಮಾಲೀಕರಿಗೂ ಬಿಪಿಎಲ್ ಕಾರ್ಡ್!
ಸ್ವಿಫ್ಟ್ ರಿಟ್ಸ್ ಬಲೆನೋ, ಇಕೊ, ರೆನಾಲ್ಟ್, ಸೆಲೆರಿಯೋ, ಅಲ್ಲೋ, ವ್ಯಾಗನರ್, ಟಾಟಾ ಟಿಯಾಗೋ, ಇಯಾನ್, ಎಸ್-ಕ್ರಾಸ್ ಸ್ಮಾರ್ಟ್ ಹೈಬ್ರಿಡ್, ಬಲೆನೋ ಡೆಲ್ಟ್ ಇನೋವಾ ಕ್ರಿಸ್ಟಾ, ಇಗ್ನಿಸ್ ಡೆಲ್ಟಾ, ಟೊಯೊಟಾ ಯಾರಿಸ್, ಬ್ರೆಝಾ, ಇತಿಯೋಸ್ ಲಿವಾ ಸೇರಿದಂತೆ ಐಷಾರಾಮಿ ಕಾರುಗಳನ್ನು ಹೊಂದಿರುವವರು, ಐಷಾರಾಮಿ ಜೀವನ ನಡೆಸುವವರೇ ಇಲಾಖೆಗೆ ತಪ್ಪು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದಿರುವುದು ಪತ್ತೆಯಾಗಿದೆ.
ಅನರ್ಹ ಪಟ್ಚಿಯಲ್ಲಿ(cancelled suspended ration card list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಈ ತಿಂಗಳಿನಿಂದ ಅನ್ನಭಾಗ್ಯ ಹಾಗೂ ಗೃಹಲಕ್ಷ್ನಿ ಹಣ ಸಿಗುವುದಿಲ್ಲ
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್(Aadhaar link) ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ (RKVY) ತೋಟಗಾರಿಕೆ ಇಲಾಖೆಯಿಂದ(Horticulture department)ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ(Water soluble fertiliser unit)ಸಹಾಯಧನ(subsidy) ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ(SCST) ಹಾಗೂ ಸಾಮಾನ್ಯ(General)ವರ್ಗದ ರೈತರಿಂದ ಆರ್ಜಿ ಆಹ್ವಾನಿಸಲಾಗಿದೆ.
ನೀರಿನಲ್ಲಿ ಕರಗುವ ರಸಗೊಬ್ಬರ ಘಟಕದ(Water soluble fertiliser unit) ಪ್ರತಿ ಹೆಕ್ಟೇರ್ಗೆ ವೆಚ್ಚ 50,000 ರೂ.ಇದ್ದು. ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ 20000 ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.50ರಂತೆ 25000 ರೂ.ಸಹಾಯಧನವನ್ನು ನೀಡಲಾಗುವುದು.
ತೋಟಗಾರಿಕೆ ಬೆಳೆಗಳನ್ನು(Horticulture crops)ಬೆಳೆಯುವ ರೈತರು ಅನುಮೋದಿತ ಕಂಪನಿಯಿಂದ ರಸಗೊಬ್ಬರ(fertiliser) ಖರೀದಿಸಿದ ಮೊತ್ತದ ಬಿಲ್ಲುಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(SADH), ಸಲ್ಲಿಸಿದ್ದಲ್ಲಿ ನೇರವಾಗಿ ರೈತರ ಖಾತೆಗೆ ಜಮಾ(DBT)ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(SADH,Horticulture department) ಕಚೇರಿಯನ್ನು ಸಂಪರ್ಕಿಸಲು ತಿಳಿಸಲಾಗಿದೆ.
ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://horticulturedir.karnataka.gov.in/info-2/Facilities+available+to+farmers/kn
]]>
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
ಎಲ್ಲಾ ರೈತಬಾಂಧವರಿಗೂ Krushi Rushi ವೆಬ್ಸೈಟ್ ಗೆ ಮತ್ತೆ ಸ್ವಾಗತ, ಈ ಲೇಖನದಲ್ಲಿ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ಹೇಗೆ ಚೆಕ್ ಮಾಡಬೇಕು ಎಂದು ತಿಳಿಸಲಾಗಿದೆ.
ಕರ್ನಾಟಕ ಸರ್ಕಾರದಿಂದ 2024-25 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (Pradan mantri fasal bheema yojana) ಯೋಜನೆಯಡಿ ಬೆಳೆವಿಮೆ ಅರ್ಜಿ ಆಹ್ವಾನಿಸಲಾಗಿದ್ದು,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ ಹಿಂಗಾರು ಹಂಗಾಮಿನ ಹವಾಮಾನ ವೈಪರಿತ್ಯದಿಂದ ಆಗುವ ಬೆಳೆಹಾನಿ ನಷ್ಟದಿಂದ ಪಾರಾಗಿ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Rabi"(ಹಿಂಗಾರು)
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ
ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ(Hingaru belevime last date) ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ (Rabi crop insurance last date) ತಿಳಿದುಕೊಂಡು ಬೆಳೆವಿಮೆ ಕಟ್ಟಿ
ರೈತ ಭಾಂದವರೆ ಈ ಮಾಹಿತಿ ನಿಮಗೆ ಉಪಯೋಗವಾಗಿದ್ದರೆ, ವಾಟ್ಸಪ್ ಮೂಲಕ ಇತರರಿಗೂ ಶೇರ್ ಮಾಡಿ
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ಕೃಷಿ ಪರಿಕರಗಳನ್ನು ಆರ್ಡರ್ ಮಾಡಿದರೆ,ನಿಮ್ಮ ಮನೆ ಬಾಗಿಲಿಗೆ ಕಳಿಸಲಿದ್ದೇವೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ(e-status) ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ(DBT status) ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ಸೂಚನೆ-ಜಿಲ್ಲೆ select ಮಾಡುವಾಗ ತಪ್ಪಾಗಿ ಬೇರೆ ಜಿಲ್ಲೆ select ಮಾಡಿದರೆ ಈ ಕೆಳಗಿನಂತೆ No data found ಎಂದು ತೋರಿಸುತ್ತದೆ. ಅದಕ್ಕಾಗಿ ಸರಿಯಾದ ಜಿಲ್ಲೆಯನ್ನು select ಮಾಡಿ)
(ಸೂಚನೆ Service unavailable ಎಂದು ತೋರಿಸಿದರೆ ಮತ್ತೆ ಪುನಃ ಸ್ವಲ್ಪ ಸಮಯದ ನಂತರ ಪ್ರಯತ್ನಿಸಿ)
ನಂತರ ನೇರ ನಗದು ವರ್ಗಾವಣೆ ಸ್ಥಿತಿ (Status of DBT) ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್(Ration card number) ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ (Annabhagya amount)ಮೊತ್ತವನ್ನು ತೋರಿಸುತ್ತದೆ
ಮಳೆಯ ಕಾರಣಕ್ಕೆ ರಾಜ್ಯಾದ್ಯಂತ 80,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶ(crop loss)ವಾಗಿದ್ದು, ವಾರದೊಳಗಾಗಿ ಎಲ್ಲಾ ರೈತರಿಗೂ ಪರಿಹಾರ(parihara) ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.
ಈ ಬಗ್ಗೆ ಮಾತನಾಡಿದ ಅವರು, "ರಾಜ್ಯಾದ್ಯಂತ ಕೃಷಿ ಬೆಳೆ 78679 ಹೆಕ್ಟೇರ್ ಹಾನಿ(bele hani)ಯಾಗಿದ್ದರೆ, ತೋಟಗಾರಿಕಾ ಬೆಳೆ 2294 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ.
ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿವೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು. ಪ್ರಸ್ತುತ ರಾಜ್ಯ ಸರ್ಕಾರದ ಬಳೆ ಇರುವ ಸಂಪನ್ಮೂಲದಲ್ಲೇ ಪರಿಹಾರ ನೀಡಲಾಗುವುದು. ಇನ್ನೂ ಒಂದೂವರೆ ತಿಂಗಳ ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆಹಾನಿ(croploss)ಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು ತದನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು' ಎಂದು ತಿಳಿಸಿದರು.
ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ(poultry), ಕುರಿ(Sheep), ಮೇಕೆ(goat), ಹಂದಿ ಸಾಕಾಣಿಕೆ ಮತ್ತು ರಸಮೇವು(Silage) ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.
National livestock mission
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ
(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)
ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ (Kisan credit card)ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.
ಅವಶ್ಯಕ ದಾಖಲಾತಿಗಳು :-
1)ಆಧಾರ,
2)ಪಹಣಿ ಪತ್ರ
3)ಬ್ಯಾಂಕ್ಖಾತೆ ಸಂಖ್ಯೆ,
ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು
4)ಭಾವ ಚಿತ್ರ.
ಕ್ರ.ಸಂ |
ಘಟಕ |
ಸೌಲಭ್ಯಗಳ ವಿವರ |
|
ಹೈನುಗಾರಿಕೆ |
|
1 |
ಮಿಶ್ರತಳಿ ದನಗಳ ನಿರ್ವಹಣೆ (1+1) |
ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ |
|
ಆ. ಸುಧಾರಿತ ಎಮ್ಮೆಗಳ ನಿರ್ವಹಣೆ |
ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ |
|
ಕುರಿ ಸಾಕಾಣಿಕೆ |
|
2 |
ಕುರಿಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ |
|
ಕುರಿಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (10) |
ರೂ. 13,000 ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (20) |
ರೂ. 26,000 ರಂತೆ ಸಾಲ ಸೌಲಭ್ಯ |
|
ಮೇಕೆ ಸಾಕಾಣಿಕೆ |
|
3 |
ಮೇಕೆಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ |
|
ಮೇಕೆಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ |
4 |
ಹಂದಿ ಸಾಕಾಣಿಕೆ (10) |
ರೂ,60,000 ರಂತೆ ಸಾಲ ಸೌಲಭ್ಯ |
|
ಕೋಳಿ ಸಾಕಾಣಿಕೆ |
|
5 |
ಮಾಂಸದ ಕೋಳಿ ಸಾಕಾಣಿಕೆ |
2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ |
|
ಮೊಟ್ಟೆ ಕೋಳಿ ಸಾಕಾಣಿಕೆ |
1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ |
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.
Vetarnary department subsidy schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಹಾಲು ಉತ್ಪಾದಕರಿಗೆ ಪ್ರೋತ್ಸಾಹ(Milk incentive)
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ಲಸಿಕಾ ಕಾರ್ಯಕ್ರಮ(Vaccination program)
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ(Back yard poultry)
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>ಅಗಸ್ಟ್ ತಿಂಗಳ 2000 ರೂಪಾಯಿ ಗೃಹಲಕ್ಷ್ಮಿ ಹಣ (Gruhalakshmi 13th installment)ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ*
ಇಲ್ಲಿಯವರೆಗೂ ಎಷ್ಟು ಕಂತಿನ ಗೃಹಲಕ್ಷ್ಮಿ ಹಣ ಜಮಾ ಆಗಿದೆ ಎಂದು ತಿಳಿಯಲು ಹೀಗೆ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಶುಂಠಿ ಬೆಳೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಬೆಳೆವಿಮೆ ಹಣ ಜಮಾ(Belevime hana jama)ಮಾಡಲಾಗುತ್ತಿದ್ದು,ಕಳೆದ ಎರಡು ದಿನಗಳಿಂದ ಎಕರೆಗೆ 37,300 ರೂಪಾಯಿಯಂತೆ ರೈತರ ಖಾತೆಗೆ ಜಮಾ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ.
2024 - 25ನೇ ಸಾಲಿನಲ್ಲಿ ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
ಸ್ವಾವಲಂಬಿ ಸಾರಥಿ ಯೋಜನೆ(Swavalambi sarathi yojane)
ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು (Car)ಅಥವಾ ಗೂಡ್ ವಾಹನಗಳಂತಹ (Goods vehicle)ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.
ಗಂಗಾಕಲ್ಯಾಣ ಯೋಜನೆಯಡಿ 4.75 ಲಕ್ಷ ಸಹಾಯಧನ(Ganga kalyana yojane)
2024 - 25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ 50,000 ರೂಪಾಯಿ ಸಹಾಯಧನ(Self employment direct loan scheme)
2024 - 25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
ಮೈಕ್ರೋ ಕ್ರೇಡಿಟ್ (ಪ್ರೇರಣಾ) ಯೋಜನೆಯಡಿ 1.5 ಲಕ್ಷ ಸಹಾಯಧನ(Micro credit scheme)
2024 - 25ನೇ ಸಾಲಿನಲ್ಲಿ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ಆಧಾರ್ ಕಾರ್ಡ್(Aadhaar card)
ಬ್ಯಾಂಕ್ ಪಾಸ್ ಬುಕ್(Bank passbook)
ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ(Caste certificate)
(DL) ಡ್ರೈವಿಂಗ್ ಲೈಸೆನ್ಸ್
ಫೋಟೋ(photo)
ಮೊಬೈಲ್ ನಂಬರ್(Mobile number)
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್(Seva sindhu Portal) https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಿ ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು.
]]>
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ(Pradan mantri fasal bheema yojane) 2023-24ನೇ ಸಾಲಿನಲ್ಲಿ ಖಾಸಗಿ ವಿಮೆ ಸಂಸ್ಥೆಯವರು ಮುಂಗಾರು ಹಂಗಾಮಿನಲ್ಲಿ ಹಾವೇರಿ ಜಿಲ್ಲೆಯ ಬೆಳೆ ಕಟಾವು ಪ್ರಯೋಗಗಳ(Crop cutting experiment)ಸಂಬಂಧ ರಾಜ್ಯ ಸರ್ಕಾರದ ಸಮಿತಿಯ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರದ ತಾಂತ್ರಿಕ ಸಲಹಾ ಸಮಿತಿಗೆ ಮೇಲ್ಮನವಿ ಸಲ್ಲಿಸಿದ್ದರು.
ರಾಜ್ಯದಿಂದ ಪ್ರಬಲವಾದ ವಾದವನ್ನು ಮಂಡಿಸಿದ್ದ ಫಲಶ್ರುತಿಯಾಗಿ ಆಕ್ಷೇಪಣೆಗೊಳಗಾಗಿದ್ದ ಸುಮಾರು 65000 ಅರ್ಹ ರೈತ ಫಲಾನುಭವಿಗಳಿಗೆ ರೂ. 45 ಕೋಟಿ ಬೆಳೆ ವಿಮಾ (crop insurance)ಪರಿಹಾರ ಮೊತ್ತವನ್ನು(Belevime hana bidugade) ಅಂದಾಜಿಸಲಾಗಿದೆ. ಇದನ್ನು ಸದ್ಯದಲ್ಲೇ ಇತ್ಯರ್ಥಪಡಿಸಲಾಗುವುದು ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ತಿಳಿಸಿದ್ದಾರೆ.
.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://youtu.be/x4mkewXVrNQ?si=NNCOIpitY2RUNzzs
ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆಗೆ(PMKMY) ಜಾರ್ಖಂಡ್ನ ರಾಂಚಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಇದು ಕೇಂದ್ರ ವಲಯದ ಯೋಜನೆಯಾಗಿದ್ದು, ಇದು ಸಹಕಾರ ಮತ್ತು ರೈತರ ಕಲ್ಯಾಣ, ಕೃಷಿ ಇಲಾಖೆ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಮತ್ತು ಭಾರತ ಸರ್ಕಾರವು ಭಾರತೀಯ ಜೀವ ವಿಮಾ ನಿಗಮದ (LIC) ಸಹಭಾಗಿತ್ವದಲ್ಲಿ ನಿರ್ವಹಿಸುತ್ತದೆ.
ಎಲ್ಐಸಿ ಪಿಎಂ ಕಿಸಾನ್ ಮಾನ್-ಧನ್ ಯೋಜನೆಗೆ(Pradan mantri kisan mandhan yojane) ಪಿಂಚಣಿ ನಿಧಿ ನಿರ್ವಾಹಕರಾಗಿದ್ದು, ಇದು ರೂ.3000 ರೂಪಾಯಿಗಳ ಖಚಿತವಾದ ಮಾಸಿಕ ಪಿಂಚಣಿಯನ್ನು ಒದಗಿಸುತ್ತದೆ.ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರು( 2 ಹೆಕ್ಟೇರ್ ವರೆಗೆ ಸಾಗುವಳಿ ಭೂಮಿಯನ್ನು ಹೊಂದಿರುವವರು) ಈ ಯೋಜನೆಗೆ ಅರ್ಹರು.ಪ್ರತಿ ತಿಂಗಳು ನಿಮ್ಮ ವಯಸ್ಸಿಗನುಗುಣವಾಗಿ ಕಂತು ಕಟ್ಟಿದರೆ 60 ವರ್ಷ ವಯಸ್ಸಿನ ನಂತರ ನಿಮ್ಮ ಖಾತೆಗೆ ಪ್ರತಿ ತಿಂಗಳು 3000 ರೂಪಾಯಿ ಜಮಾ ಆಗಲಿದೆ.ಭಾರತದಲ್ಲಿನ ಸಣ್ಣ ಮತ್ತು ಅತಿ ಸಣ್ಣ ರೈತರ ಜೀವನವನ್ನು ಸುರಕ್ಷಿತಗೊಳಿಸುವ ಉದ್ದೇಶದಿಂದ ಈ ಯೋಜನೆಯನ್ನು ಪರಿಚಯಿಸಲಾಗಿದೆ.
ಭಾರತದಲ್ಲಿ PM-KMY ಯೋಜನೆಯು 18 ರಿಂದ 40 ವರ್ಷ ವಯಸ್ಸಿನ ರೈತರಿಗೆ ಕೇಂದ್ರ ವಲಯದ ಯೋಜನೆಯಾಗಿದೆ . ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ನಿರ್ವಹಿಸುವ ಪಿಂಚಣಿ ನಿಧಿಯ ಅಡಿಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಫಲಾನುಭವಿಯು PM-KMY ಯೋಜನೆಯ ಸದಸ್ಯರಾಗಬಹುದು. ಹೀಗೆ ಸದಸ್ಯರು ತಮ್ಮ ವಯಸ್ಸಿಗೆ ಅನುಗುಣವಾಗಿ ಕೇಂದ್ರ ಸರ್ಕಾರದಿಂದ ಸಮಾನ ಕೊಡುಗೆಯನ್ನು ಒದಗಿಸುವುದರೊಂದಿಗೆ ಪಿಂಚಣಿ ನಿಧಿಗೆ ರೂ.55/- ರಿಂದ ರೂ.200/- ರ ನಡುವೆ ಮಾಸಿಕ ಕೊಡುಗೆಯನ್ನು ನೀಡಬೇಕಾಗುತ್ತದೆ.
18 ರಿಂದ 40 ವರ್ಷದವರು ಕಟ್ಟಬೇಕಾದ ಕಂತಿನ ವಿವರ(PMKMY contribution chart
ಉದಾಹರಣೆಗೆ ನಿಮ್ಮ ವಯಸ್ಸು 18 ವರ್ಷವಾಗಿದ್ದರೆ ಪ್ರತಿ ತಿಂಗಳು 55 ರೂಪಾಯಿಯನ್ನು ನೀವು ತುಂಬಿದರೆ, ಸರ್ಕಾರ ಉಳಿದ 55 ರೂಪಾಯಿಯನ್ನು 60 ವರ್ಷದವರೆಗೆ ಕಟ್ಟಿಲಿದೆ.
60 ವರ್ಷಗಳ ನಂತರ ನಿಮಗೆ ಪ್ರತಿ ತಿಂಗಳು 3000 ರೂಪಾಯಿ ಪಿಂಚಣೆ ದೊರೆಯಲಿದೆ.ಯಾವ ವಯಸ್ಸಿಗೆ ಎಷ್ಟು ಹಣ ಕಟ್ಟಬೇಕೆಂದು ಈ ಕೆಳಗಿನ ಪಟ್ಟಿಯಲ್ಲಿ ವಿವರಿಸಲಾಗಿದೆ.
ನವೆಂಬರ್ 14, 2019 ರ ವರದಿಗಳ ಪ್ರಕಾರ, ಭಾರತದಲ್ಲಿ ಒಟ್ಟು 18,29,469 ರೈತರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಈ ಯೋಜನೆಯು ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನ್ವಯಿಸುತ್ತದೆ . ಈ ಯೋಜನೆಯ ಅಡಿಯಲ್ಲಿ ಅವರು ಮತ್ತು ಕೇಂದ್ರ ಸರ್ಕಾರದಿಂದ ನೀಡಬೇಕಾದ ಕೊಡುಗೆಯ ಅನುಪಾತವು 1:1 ಆಗಿದೆ. PM-KMY ಯೋಜನೆಯಡಿ ಸರ್ಕಾರದ ಕೊಡುಗೆಯು ರೈತರು ನೀಡುವ ಮಾಸಿಕ ಕೊಡುಗೆಗೆ ಸಮಾನವಾಗಿರುತ್ತದೆ.
PMKMY ಯೋಜನೆಗೆ ಯಾರೆಲ್ಲಾ ಅರ್ಹರು?
ಸಂಬಂಧಿತ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಭೂ ದಾಖಲೆಗಳ ಪ್ರಕಾರ ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರು ( 2 ಹೆಕ್ಟೇರ್ಗಳವರೆಗೆ ಸಾಗುವಳಿ ಭೂಮಿಯನ್ನು ಹೊಂದಿದ್ದಾರೆ ) ಮತ್ತು 18 ವರ್ಷದಿಂದ 40 ವರ್ಷ ವಯಸ್ಸಿನವರು ಪ್ರಧಾನ ಮಂತ್ರಿ ಕಿಸಾನ್ ಮಾನ್-ಧನ್ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಮತ್ತು ಈ ಯೋಜನೆಯ ಎಲ್ಲಾ ಪ್ರಯೋಜನಗಳನ್ನು ಪಡೆಯಬಹುದು.
ಹೊರಗಿಡುವ ಮಾನದಂಡದ ವ್ಯಾಪ್ತಿಯೊಳಗೆ ಬರುವ ರೈತರು ಪ್ರಯೋಜನಕ್ಕೆ ಅರ್ಹರಲ್ಲ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್(Aadhaar card)
ಬ್ಯಾಂಕ್ ಪಾಸ್ ಬುಕ್(Bank passbook)
ಅರ್ಜಿ ಸಲ್ಲಿಸುವುದು ಹೇಗೆ?
ಹತ್ತಿರದ ಗ್ರಾಮ ಒನ್ ಅಥವಾ CSC Centre ಗಳಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ LIC ಕಛೇರಿಗೆ ಬೇಟಿ ಕೊಡಿ
ಆದಾಗ್ಯೂ, ಈ ಕೆಳಗಿನ ಮಾನದಂಡಗಳ ಅಡಿಯಲ್ಲಿ ಬರುವ ರೈತರು ಯೋಜನೆಗೆ ಅರ್ಹರಾಗಿರುವುದಿಲ್ಲ :
1.ರಾಷ್ಟ್ರೀಯ ಪಿಂಚಣಿ ಯೋಜನೆ (NPS), ನೌಕರರ ರಾಜ್ಯ ವಿಮಾ ನಿಗಮ ಯೋಜನೆ, ಉದ್ಯೋಗಿಗಳ ನಿಧಿ ಸಂಸ್ಥೆ ಯೋಜನೆ ಇತ್ಯಾದಿಗಳಂತಹ ಇತರ ಯೋಜನೆಗಳ ಅಡಿಯಲ್ಲಿ ಈಗಾಗಲೇ ನೋಂದಾಯಿಸಲ್ಪಟ್ಟಿರುವ ಸಣ್ಣ ಮತ್ತು ಅತಿ ಸಣ್ಣ ರೈತರು PM-KMY ಯೋಜನೆಗೆ ಅರ್ಹರಾಗಿರುವುದಿಲ್ಲ.
2.ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ನಿರ್ವಹಿಸುವ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ (PMSYM) ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಪ್ರಧಾನ ಮಂತ್ರಿ ಲಘು ವ್ಯಾಪಾರಿ ಮಾನ್-ಧನ್ ಯೋಜನೆ (PM-LVM) ಗಾಗಿ ಆಯ್ಕೆ ಮಾಡಿದ ರೈತರು ಸಹ ಅಲ್ಲ ಈ ಯೋಜನೆಗೆ ಅರ್ಹರು.
PM-KMY ಯೋಜನೆಯ ಪ್ರಯೋಜನಗಳು
ಫಲಾನುಭವಿಯೊಂದಿಗೆ, ಸಂಗಾತಿಯು ಸಹ ಯೋಜನೆಗೆ ಅರ್ಹರಾಗಿದ್ದಾರೆ ಮತ್ತು ನಿಧಿಗೆ ಪ್ರತ್ಯೇಕ ಕೊಡುಗೆಗಳನ್ನು ನೀಡುವ ಮೂಲಕ ರೂ.3000/- ಗಳ ಪ್ರತ್ಯೇಕ ಪಿಂಚಣಿ ಪಡೆಯಬಹುದು.
ನಿವೃತ್ತಿಯ ದಿನಾಂಕದ ಮೊದಲು ಫಲಾನುಭವಿಯು ಮರಣಹೊಂದಿದರೆ, ಉಳಿದ ಕೊಡುಗೆಗಳನ್ನು ಪಾವತಿಸುವ ಮೂಲಕ ಸಂಗಾತಿಯು ಈ ಯೋಜನೆಯನ್ನು ಮುಂದುವರಿಸಬಹುದು. ಆದರೆ ಸಂಗಾತಿಯು ಮುಂದುವರಿಯಲು ಬಯಸದಿದ್ದರೆ, ಬಡ್ಡಿಯೊಂದಿಗೆ ರೈತರು ನೀಡಿದ ಒಟ್ಟು ಕೊಡುಗೆಯನ್ನು ಸಂಗಾತಿಗೆ ಪಾವತಿಸಲಾಗುತ್ತದೆ.
ಸಂಗಾತಿಯಿಲ್ಲದಿದ್ದರೆ, ಬಡ್ಡಿಯೊಂದಿಗೆ ಒಟ್ಟು ಕೊಡುಗೆಯನ್ನು ನಾಮಿನಿಗೆ ಪಾವತಿಸಲಾಗುತ್ತದೆ.
ನಿವೃತ್ತಿ ದಿನಾಂಕದ ನಂತರ ರೈತರು ಮರಣಹೊಂದಿದರೆ, ಸಂಗಾತಿಯು ಪಿಂಚಣಿಯ 50% ಅನ್ನು ಕುಟುಂಬ ಪಿಂಚಣಿಯಾಗಿ ಪಡೆಯುತ್ತಾರೆ. ರೈತ ಮತ್ತು ಸಂಗಾತಿಯ ಮರಣದ ನಂತರ, ಸಂಗ್ರಹವಾದ ಕಾರ್ಪಸ್ ಅನ್ನು ಪಿಂಚಣಿ ನಿಧಿಗೆ ಹಿಂತಿರುಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/Documents/PM-KMY%20-%20Salient%20Features.pdf
]]>
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
ನಾಡಿನ ರೈತ ಬಾಂಧವರ ಶ್ರೇಯೋಭಿವೃದ್ಧಿಗಾಗಿ ಕೃಷಿ ಇಲಾಖೆಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗಾದ್ರೇ ಯಾವೆಲ್ಲ ಅಂತ ಮುಂದೆ ಓದಿ.
ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ(Agriculture department)ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಭೂತಾಯಿ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ.ಮಣ್ಣಿಂದ ಜೀವ, ಮಣ್ಣಿಂದ ಕಾಯ ಎಂದಿದೆ.
ಹೀಗಿದೆ ರೈತರಿಗಾಗಿ ಹಮ್ಮಿಕೊಂಡಿರುವಂತ ನೂತನ ಕಾರ್ಯಕ್ರಮಗಳ ಪಟ್ಟಿ
-ರೈತ ಸಂಪರ್ಕ ಕೇಂದ್ರಗಳಲ್ಲಿ(RSK) QR ಕೋಡ್ ಬಳಸಿ ಕೃಷಿ ಉಪಕರಣಗಳ ವಿತರಣೆಯ ಕ್ರಮ ವಹಿಸಲಾಗಿದೆ. ಈ ಮೂಲಕ ಪಾರದರ್ಶಕತೆಯೊಂದಿಗೆ ನಿರ್ವಹಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
-ಭೂಸಾರ ನೂತನ ಮೊಬೈಲ್ ಆಪ್ ಬಳಸಿ 4.27 ಲಕ್ಷ ಮಣ್ಣು ಮಾದರಿಗಳ ಸಂಗ್ರಹಣೆ ಮಾಡಲಾಗಿದೆ. 1.26 ಲಕ್ಷ ಮಣ್ಣು ಆರೋಗ್ಯ ಕಾರ್ಡ್ ಸೂಕ್ತ ಶಿಫಾರಸ್ಸಿನೊಂದಿಗೆ ವಿತರಣೆ ಮಾಡಲಾಗಿದೆ.
ಕೃಷಿ ಣಲಾಖೆಯ ನೂತನ ರೈತ ಕರೆ ಕೇಂದ್ರದಲ್ಲಿ IVRS ತಂತ್ರಾಂಶ ಸ್ಪರ್ಶ ನೀಡಲಾಗಿದೆ. ಈವರೆಗೆ 1,28,987 ಕರೆಗಳಿಗೆ ಸೂಕ್ತ ಪರಿಹಾರ ನೀಡಲಾಗಿದೆ. ರೈತ ಕರೆ ಕೇಂದ್ರದ ಸಹಾಯವಾಣಿ ಸಂಖ್ಯೆ 18004253553 ಆಗಿದೆ.
-ಇ-ಸ್ಯಾಪ್(e-SAP) ತಂತ್ರಾಂಶ ಬಳಸಿ 64,392 ಕೀಟ, ರೋಗ ಬಾಧೆ ಸರ್ವೇಕ್ಷಣೆ ಮಾಡಲಾಗಿದೆ. 62,916 ನಿಖಲ ವೈಜ್ಞಾನಿಕ ಸಲಹೆಗಳೊಂದಿಗೆ ನಿರ್ವಹಣೆ ಮಾಡಲಾಗಿದೆ.
ಒಟ್ಟಾರೆಯಾಗಿ ರಾಜ್ಯದ ರೈತರಿಗಾಗಿ ಕ್ಯೂ ಆರ್ ಕೋಡ್(QR code) ಅಳವಡಿಸಿ ಕೃಷಿ ಉಪಕರಣ(Agriculture machinery)ವಿತರಣೆ, ಭೂಸಾರ ಮೊಬೈಲ್ ತಂತ್ರಾಂಶ, ರೈತ ಕರೆ ಕೇಂದ್ರ ಸ್ಥಾಪನೆ, ಇ-ಸ್ಯಾಪ್ ತಂತ್ರಾಂಶ ಅಳವಡಿಕೆಯಂತ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದೆ.
50 ರಿಂದ 90% ಸಬ್ಸಿಡಿಯಲ್ಲಿ ಮಿನಿ ಟ್ರಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್ ಖರೀದಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Agriculture department subsidy schemes-2024
ಪ್ರಸಕ್ತ(2024-25) ಸಾಲಿನ ಕೃಷಿ ಯಾಂತ್ರೀಕರಣ(Farm mechanisation) ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ(Agro processing) ಕಾರ್ಯಕ್ರಮದಡಿ ಸಹಾಯಧನದಲ್ಲಿ ಕೃಷಿ ಉಪಕರಣಗಳನ್ನು ವಿತರಿಸಲಾಗುತ್ತಿದೆ. ಸಾಮಾನ್ಯ ವರ್ಗದ ರೈತರಿಗೆ ಶೇ.50ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರಾಕ್ಟರ್(Mini tractor), ಪವರ್ ಟಿಲ್ಲರ್(Power tiller), ರೋಟೋವೇಟರ್(Rotovator), ಕಳೆ ಕೊಚ್ಚುವ ಯಂತ್ರಗಳು(ಪವರ್ ವೀಡರ್/Power weeder), ಪವರ್ ಸ್ಪ್ರೇಯರ್(power sprayer), ಡೀಸೆಲ್ ಪಂಪ್ ಸೆಟ್(Diseal pumpset), ಮೊಟೋಕರ್ಟಗಳನ್ನು ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣಾ(Agro processing) ಘಟಕಗಳಾದ ಪ್ರೋರ್ ಮಿಲ್(Flour mill), ಮಿನಿ ರೈಸ್ ಮಿಲ್(Rice mill), ರಾಗಿ ಕ್ಲೀನಿಂಗ್ ಮಿಶನ್(Ragi cleaning machine), ಚಿಲ್ಲಿಪೌಡರಿಂಗ್ ಮಿಶನ್(Chilli pounding machine), ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು(oil mill) ಮತ್ತು ಇತರೆ ಕೃಷಿ ಉಪಕರಣಗಳನ್ನು(Agriculture machinery)ಸಹಾಯಧನದಲ್ಲಿ(Subsidy) ವಿತರಿಸಲಾಗುತ್ತಿದೆ.
ರೈತರು ಪಹಣಿ(RTC), ಆಧಾರ್ ಕಾರ್ಡ್(Aadhaar card), ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್(Bank passbook), ಒಂದು ಭಾವಚಿತ್ರ, ರೂ.100ರ ಛಾಪಾ ಕಾಗದದೊಂದಿಗೆ ಹೋಬಳಿ ಮಟ್ಟದಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
90% ಸಬ್ಸಿಡಿಯಲ್ಲಿ ಕೃಷಿಹೊಂಡ,ಡಿಸೇಲ್ ಪಂಪಸೆಟ್,ಟಾರ್ಪಲಿನ್,ತಂತಿಬೇಲಿ ನಿರ್ಮಾಣಕ್ಕೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Krushi Honda yojane
ಕೃಷಿ ಇಲಾಖೆಯು ಮಳೆ ನೀರನ್ನು ಸಂಗ್ರಹಿಸಿ ಕೃಷಿಯಲ್ಲಿ ಸದ್ಬಳಕೆ ಮಾಡಲು ರೈತರನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ವಿವಿದ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಟಾನಗೊಳ್ಳುತ್ತಿದ್ದು, ಬದು, ಕೃಷಿ ಹೊಂಡ,(Farm pond) ಕೃಷಿಹೊಂಡದ ಸುತ್ತ ತಂತಿ ಬೇಲಿ, ಕೃಷಿಹೊಂಡಕ್ಕೆ ಪಾಲೀಥಿನ್ ಹೊದಿಕೆ(Tarpualin), ಪಂಪ್ ಸೆಟ್(Diseal Pumpset) ಹಾಗೂ ಲಘು ನೀರಾವರಿ ಘಟಕಗಳನ್ನು ಅನುಷ್ಠಾನ ಮಾಡಲು ಸಹಾಯಧನ ನೀಡಲಾಗುತ್ತಿದೆ. ರೈತರು ಈ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕಾಗಿರುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90% ಸಹಾಯಧನ ನೀಡಲು ಅವಕಾಶವಿರುತ್ತದೆ.
ಆಸಕ್ತ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಾಸ್ ಪೋರ್ಟ್ ಸೈಜ್ ಪೋಟೊ, ಪಹಣಿ, ಜಾತಿ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.
90% ಸಬ್ಸಿಡಿಯಲ್ಲಿ ತುಂತುರು ನೀರಾವರಿ ಸೌಲಭ್ಯ
ಅನುಷ್ಠಾನ ಹೇಗೆ?
ಈ ಯೋಜನೆಯಡಿ ರೈತರಿಗೆ ನೇರವಾಗಿ ಹಣ ನೀಡುವ ವ್ಯವಸ್ಥೆಯಿಲ್ಲ. ಬದಲಾಗಿ ಯೋಜನೆಗೆ ಅರ್ಜಿ ಸಲ್ಲಿಸಿದ ರೈತರ ಜಮೀನಿಗೆ ನಿರ್ದಿಷ್ಟ ಸಂಸ್ಥೆಯ ಮೂಲಕ ಹನಿ ನೀರಾವರಿಗೆ ಪೂರಕವಾದ ಪೈಪ್ಸೆಟ್ಗಳನ್ನು ಒದಗಿಸಿ, ಅಳವಡಿಸಲಾಗುತ್ತದೆ. ಶೇ. 90ರಷ್ಟು ಖರ್ಚನ್ನು ಸರಕಾರಗಳು ಭರಿಸಿದರೆ ಶೇ. 10ರಷ್ಟು ಖರ್ಚನ್ನು ರೈತರು ಅಥವಾ ಕೃಷಿಕರು ಭರಿಸಬೇಕು. ನಿರ್ದಿಷ್ಟ ಸಂಸ್ಥೆಯವರು ತೋಟಕ್ಕೆ ಆಗಮಿಸಿ ಪೈಪ್ ಅಳವಡಿಸಿ ಕೊಡುತ್ತಾರೆ.
ಏನೇನು ಸೌಲಭ್ಯ?
ಒಂದು ಎಕ್ರೆಗಿಂತ ಕಡಿಮೆ ಜಮೀನು ಇರುವ ರೈತರಿಗೆ 18 ಪೈಪ್, 3 ಪೈಪ್ಕ್ಯಾಪ್, 3 ಸ್ಪಿಂಕ್ಲರ್(Sprinkler), 1 ಬೆಂಡ್, 1 ಎಂಡ್ ಪ್ಲಗ್ ಹೀಗೆ 8 ಸಾಮಗ್ರಿಗಳನ್ನು ನೀಡಲಾಗುತ್ತದೆ. ಒಂದು ಎಕ್ರೆ ಗಿಂತ ಹೆಚ್ಚು ಜಮೀನು ಇದ್ದಾಗ 30ರಿಂದ 41 ಪೈಪ್, ತಲಾ 5ರಿಂದ 9 ಕ್ಯಾಪ್, ಸ್ಪಿಂಕ್ಲರ್ ಸಹಿತ 8 ಸಾಮಗ್ರಿ ನೀಡಲಾಗುತ್ತದೆ.
ಎಷ್ಟು ಅನುದಾನ?
ಒಂದು ಎಕ್ರೆಗಿಂತ ಕಡಿಮೆ ಜಮೀನು ಇದ್ದಾಗ ಗರಿಷ್ಠ 13,211 ರೂ. ಖರ್ಚಾದರೆ 2,496 ರೂ. ರೈತರು ನೀಡಬೇಕಾಗಿತ್ತು. ಜಮೀನು ಒಂದು ಎಕ್ರೆಗಿಂತ ಹೆಚ್ಚಿದ್ದಾಗ 19,429 ರೂ.ಗಳಿಂದ 28,050 ರೂ.ಗಳ ವರೆಗೂ ಖರ್ಚಾದಾಗ ರೈತರು 4, 139ರಿಂದ 5,772 ರೂ.ಗಳ ವರೆಗೂ ಪಾವತಿ ಮಾಡಬೇಕಾಗಿ ಬರುತ್ತಿತ್ತು. ಇದು ಶೇ. 90ರ ಸಬ್ಸಿಡಿ ಲೆಕ್ಕಾಚಾರವಾಗಿದ್ದು. ಸಬ್ಸಿಡಿ ಕಡಿಮೆಯಾದಂತೆ ರೈತರಿಗೆ ಹೊರೆ ಜಾಸ್ತಿಯಾಗುತ್ತದೆ.
ಹೈಟೆಕ್ ಹಾರ್ವೆಸ್ಟರ್ ಹಬ್(Hi tech harvester hub)ಯೋಜನೆಯಡಿ ಕಬ್ಬು ಕಟಾವು ಯಂತ್ರ,ಕಂಬೈನ್ಡ್ ಹಾರ್ವೆಸ್ಟರ್ ಸ್ಥಾಪನೆಗೆ 50 ರಿಂದ 70% ಸಬ್ಸಿಡಿ
ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯನ್ನು ಅನುಷ್ಟಾನ ಮಾಡಲು ಸರ್ಕಾರದ ಆದೇಶವಾಗಿದ್ದು, ಈ ಯಂತ್ರಗಳನ್ನು ಬಾಡಿಗೆಗೆ ನೀಡುವ ಮೂಲಕ ರೈತರು ಹೆಚ್ಚುವರಿ ಆದಾಯ ಪಡೆಯಬಹುದಾಗಿದೆ. ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್ಗಳನ್ನು ಬೆಳೆಯ ವಿಧ ಮತ್ತು ಕಟಾವು ಅವಧಿಯ ಆಧಾರದ ಮೇಲೆ ಕಾರಿಡಾರ್ ಮಾದರಿಯಲ್ಲಿ ಸ್ಥಾಪಿಸಬಹುದು.
ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ ಗರಿಷ್ಟ
ರೂ.40 ಲಕ್ಷ ಸಹಾಯಧನ, ಪರಿಶಿಷ್ಟ ಜಾತಿ, ಪರಿಶಿಷ್ಟ
ಪಂಗಡ ವರ್ಗದ ರೈತರಿಗೆ ಗರಿಷ್ಠ ಶೇ.70ರಂತೆ ಹಾಗೂ
ಸಂಘ-ಸಂಸ್ಥೆಗಳಿಗೆ ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ
ಕೇಂದ್ರಗಳ ಸೇವಾದಾರ ಸಂಸ್ಥೆ,
ಎಫ್ಪಿಓಗಳನ್ನೊಳಗೊಂಡಂತೆ ಗರಿಷ್ಠ ಶೇ.70 ರಂತೆ
ಗರಿಷ್ಟ ರೂ.50 ಸಹಾಯಧನ ನೀಡಲಾಗುತ್ತದೆ.
ಸಂಘ-ಸಂಸ್ಥೆಗಳು, ಎಫ್ಪಿಓಗಳನ್ನೊಳಗೊಂಡಂತೆ ಟ್ರಸ್ಟ್ಗಳು ಮಾತ್ರ ಕಂಬೈಂಡ್ ಹಾರ್ವೆಸ್ಟರ್(Combined harvester) ಮತ್ತು ಶುಗರ್ ಕೆನ್ ಹಾರ್ವೆಸ್ಟಗಳನ್ನು(Sugrcane harvester) ಒಳಗೊಂಡ 'ಕೋಂಬೊ ಹಾರ್ವೆಸ್ಟರ್ ಹಬ್" ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಬೇಟಿ ಕೊಡಿ
]]>
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ(e-status) ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ(DBT status) ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ಸೂಚನೆ-ಜಿಲ್ಲೆ select ಮಾಡುವಾಗ ತಪ್ಪಾಗಿ ಬೇರೆ ಜಿಲ್ಲೆ select ಮಾಡಿದರೆ ಈ ಕೆಳಗಿನಂತೆ No data found ಎಂದು ತೋರಿಸುತ್ತದೆ. ಅದಕ್ಕಾಗಿ ಸರಿಯಾದ ಜಿಲ್ಲೆಯನ್ನು select ಮಾಡಿ)
ನಂತರ ನೇರ ನಗದು ವರ್ಗಾವಣೆ ಸ್ಥಿತಿ (Status of DBT) ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್(Ration card number) ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ (Annabhagya amount)ಮೊತ್ತವನ್ನು ತೋರಿಸುತ್ತದೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://youtu.be/LDdaDeWtpa4?si=B_ozWq-Bridlzqgi
ಶುಂಠಿ ಬೆಳೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಬೆಳೆವಿಮೆ ಹಣ ಜಮಾ(Belevime hana jama)ಮಾಡಲಾಗುತ್ತಿದ್ದು,ಕಳೆದ ಎರಡು ದಿನಗಳಿಂದ ಎಕರೆಗೆ 37,300 ರೂಪಾಯಿಯಂತೆ ರೈತರ ಖಾತೆಗೆ ಜಮಾ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ತೋಟಗಾರಿಕೆ ಇಲಾಖೆಯಿಂದ(Horticulture department schemes) ಸಣ್ಣ ಟ್ರ್ಯಾಕ್ಟರ್(Mini tractor)
• ಡ್ರಾಗನ್ ಪೂಟ್(Dragon fruit), ಈರುಳ್ಳಿ ಶೇಖರಣಾ ಘಟಕಕ್ಕೆ (Onion storage)ಸಹಾಯಧನ
• ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ(green house) ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಲ್ಲಿ ಅರ್ಜಿ ಸಲ್ಲಿಸಬೇಕು
ಆಸಕ್ತ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ (Horticulture department)ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ಅರ್ಜಿದಾರರ ಅಧಾರ್ ಕಾರ್ಡ್ ಪ್ರತಿ.
• ಬ್ಯಾಂಕ್ ಪಾಸ್ ಬುಕ್ ಪ್ರತಿ.
• ಪೋಟೋ.
• ಪಹಣಿ/ಉತಾರ್/RTC.
ರೇಷನ್ ಕಾರ್ಡ ಪ್ರತಿ.
ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.
ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM);
ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(Pradna mantri krishi sinchayi yojane);
ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ(drip irrigation) ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್ರವರೆಗೆ ಶೇಕಡಾ 90%) ಸಹಾಯಧನ.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ (NAREGA)ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ(PMKVY) ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ(NHM) ಸಮುದಾಯ ಕೃಷಿಹೊಂಡ(Farm pond), ಕೃಷಿಹೊಂಡ, ಪ್ಯಾಕ್ಹೌಸ್(Pack house), ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) (Fiber doti)ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್ (Aadhaar card) ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ
https://horticulturedir.karnataka.gov.in/info-2/Facilities+available+to+farmers/kn
ವಿವಿಧ ಯೋಜನೆಗಳು:
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ:(MGNAREGA)
ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೋಟಾ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ(farm pond), ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:(NHM)
ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ(farm pond), ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಯಾಕ್ಹೌಸ್(pack house) ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ:(Pradan mantri Krishi sinchayi yojane)
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ (Drip irrigation) ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.75 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.
ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ:
ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಮತ್ತು ಬೈಯೋಡೈಜಿಸ್ಟರ್ ಮತ್ತು ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಸಹ ಅರ್ಜಿ ಆಹ್ವಾನಿಸಲಾಗಿದೆ.
ಮೇಲ್ಕಂಡ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಲಾಗಿದೆ. ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.
]]>ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.
ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.
ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು" ಮೇಲೆ ಕ್ಲಿಕ್ ಮಾಡಿ
ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
ರಾಜ್ಯ ಸರ್ಕಾರವು ಸಾಮಾನ್ಯ ಜನರ ಮತ್ತು ಕೂಲಿ ಕಾರ್ಮಿಕರ ಏಳಿಗೆಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು (MGNAREGA)ಜಾರಿಗೆ ತಂದಿದ್ದಾರೆ.
ಮಹಾತ್ಮ ಗಾಂಧಿ ನರೇಗಾ ಯೋಜನೆ(NAREGA) ಅಡಿ ವೈಯಕ್ತಿಕ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಯ ಈ ಕೆಳಕಂಡ ವರ್ಗಗಳಲ್ಲಿ ಯಾವುದಾದರೂ ಒಂದು ವರ್ಗದಲ್ಲಿ ಅರ್ಹರಾಗಿರತಕ್ಕದ್ದು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ
ಅಲೆಮಾರಿ ಬುಡಕಟ್ಟುಗಳು
ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು
ಮಹಿಳಾ ಪ್ರಧಾನ ಕುಟುಂಬಗಳು
ವಿಕಲಚೇತನ ಕುಟುಂಬಗಳು
ಭೂ ಸುಧಾರಣಾ ಫಲಾನುಭವಿಗಳು
ವಸತಿ ಯೋಜನೆಗಳ ಫಲಾನುಭವಿಗಳು
ಅರಣ್ಯ ಹಕ್ಕು ಕಾಯಿದೆ 2006ರ ಫಲಾನುಭವಿಗಳು
ಸಣ್ಣ ಮತ್ತು ಅತಿ ಸಣ್ಣ ರೈತರು
ಫಲಾನುಭವಿಯು ವೈಯಕ್ತಿಕ ಸೌಲಭ್ಯ ಪಡೆಯಲು
ಫಲಾನುಭವಿಯು ಕಡ್ಡಾಯವಾಗಿ ನರೇಗಾ ಯೋಜನೆಯ ಜಾಬ್ ಕಾರ್ಡ್(Job card) ಹೊಂದಿರಬೇಕು
ಫಲಾನುಭವಿಗೆ ನೀಡಲಾದ ವೈಯಕ್ತಿಕ ಕಾಮಗಾರಿಯಲ್ಲಿ ಆತನ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಾದರು ಕೆಲಸ ನಿರ್ವಹಿಸಬೇಕು
ನರೇಗಾ ಯೋಜನೆಯಡಿ ಫಲಾನುಭವಿಕೆ ನೀಡಬಹುದಾದ ವಯಕ್ತಿಕ ಕಾಮಗಾರಿಗಳ ಗರಿಷ್ಠ ಮಟ್ಟದ ಮಿತಿಯನ್ನು 2 ಲಕ್ಷಗಳಿಗೆ ನಿಗದಿಪಡಿಸಿ ಸದರಿ ಗರಿಷ್ಠ ಮೊತ್ತದ ಮಿತಿಯನ್ನು ಹೆಚ್ಚಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗಿರುತ್ತದೆ
ಯೋಜನೆ ಅಡಿ ನೊಂದಾಯಿತವಾದ ಒಂದು ವರ್ಷ ಕುಟುಂಬವು ತನ್ನ ಜೀವಿತಾವಧಿಯಲ್ಲಿ ಗರಿಷ್ಠ ಎರಡು ವರೆ ಲಕ್ಷದ ಗಳವರೆಗೆ ಯೋಜನೆ ಅಡಿ ನೀಡಲಾಗುವ ವೈಯಕ್ತಿಕ ಕಾಮಗಾರಿಗಳನ್ನು ಪಡೆದುಕೊಳ್ಳಬಹುದಾಗಿದೆ
ನರೇಗಾ ಯೋಜನೆಯಡಿ ಕೃಷಿಹೊಂಡ ನಿರ್ಮಾಣ
ನರೇಗಾ ಯೋಜನೆ ಅಡಿ ಅರ್ಹ ಫಲಾನುಭವಿಯು ಯೋಜನೆ ಅಡಿ ನಿರ್ಮಿಸಿಕೊಂಡ ಕೃಷಿಹೊಂಡ ಕಾಮಗಾರಿಯನ್ನು ಮುಂದಿನ ಐದು ವರ್ಷಗಳವರೆಗೆ ಮುಚ್ಚತಕ್ಕದ್ದಲ್ಲ.
ಒಂದು ವೇಳೆ ಫಲಾನುಭವಿಯು ಕೃಷಿ ಹೊಂಡವನ್ನು ಮುಚ್ಚಿದ್ದಲ್ಲಿ ಕೃಷಿಹೊಂಡ ನಿರ್ಮಾಣಕ್ಕಾಗಿ ತಗಲಿದ ವೆಚ್ಚ ಹಾಗೂ ಶೇಕಡ 18ರಷ್ಟು ಬಡ್ಡಿ ಸೇರಿ ಸರ್ಕಾರಕ್ಕೆ ಬರಣ ಮಾಡತಕ್ಕದ್ದು
ಕೃಷಿ ಹೊಂಡ ನಿರ್ಮಾಣ ಕಾಮಗಾರಿಯನ್ನು ಅನುಷ್ಠಾನಗೊಳಿಸುವ ಮುಂಚೆ ಫಲಾನುಭವಿಗಳಿಂದ ಮುಚ್ಚಳಿಕೆ ಪತ್ರವನ್ನು ಕಡ್ಡಾಯವಾಗಿ ಪಡೆಯತಕ್ಕದ್ದು
ಕೃಷಿ ಹೊಂಡ ಕಾಮಗಾರಿಗಳ ಕ್ರಿಯಾಯೋಜನೆಯನ್ನು ಅನುಮೋದನೆಗಾಗಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸುವಾಗ ಮುತ್ತಳಿಕೆ ಪತ್ರದ ಪ್ರತಿಯನ್ನು ಲಗತ್ತಿಸುವುದು
ಕಾಮಗಾರಿಗಳ ಆಯ್ಕೆ ಮಾಡುವಾಗ ತಾಂತ್ರಿಕವಾಗಿ ಸೈಟ್ ಫೀಸಿಬಿಲಿಟಿ ಇರುವುದನ್ನ ಖಚಿತಪಡಿಸಿಕೊಳ್ಳುವುದು
ಕೃಷಿಹೊಂಡ ಕಾಮಗಾರಿಯ ಅನುಮೋದನೆಯಾದ ಆರ್ಥಿಕ ವರ್ಷದಲ್ಲಿಯೇ ಕಡ್ಡಾಯವಾಗಿ ಪೂರ್ಣಗೊಳಿಸುವುದು
ಅನುಷ್ಠಾನಗೊಳಿಸುವಾಗ ಮೂರು ಹಂತದ Geo Tag ಮಾಡುವ ಪ್ರಕ್ರಿಯೆಯನ್ನು ನಿಗದಿ ಅವಧಿಯೊಳಗೆ ಪೂರ್ಣಗೊಳಿಸುವುದು ಕಡ್ಡಾಯವಾಗಿರುತ್ತದೆ
ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಸಿಟಿಜನ್ ಇನ್ಫಾರ್ಮಶನ್ ಬೋರ್ಡ್ ಅಳವಡಿಸತಕ್ಕದ್ದು.
ದನದ ಶೆಡ್ ನಿರ್ಮಾಣಕ್ಕೆ 57,000 ಸಹಾಯಧನ
ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ದನಗಳ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ಯ ಇಲಾಖೆಗಳು ಮೊದಲು ನೀಡುತ್ತಿರುವ ಸಹಾಯಧನವನ್ನು ಹೆಚ್ಚಳ ಮಾಡಿ, ರಾಜ್ಯದ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿಯನ್ನು ನೀಡಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಅಂದರೆ 2022ರ ಸಾಲಿನ ಏಪ್ರಿಲ್ 1 ರಿಂದ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೂಲಿ ಕಾರ್ಮಿಕರ ಮೊತ್ತವನ್ನು ರೂಪಾಯಿ 289ರೂ.ನಿಂದ ರೂಪಾಯಿ 309ರೂ.ವರೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಮಿಕರ ಕೂಲಿ ಮೊತ್ತವನ್ನು ಹೆಚ್ಚಿಸಿ ಕೂಲಿಕಾರರಿಗೆ ಸಿಹಿಸುದ್ದಿ ನೀಡಿದೆ.
ರೈತರಿಗೆ ದನದ ಕೊಟ್ಟಿಗೆ(Danada shed) ಅಥವಾ ಶೆಡ್ ನಿರ್ಮಾಣದ ಬಗ್ಗೆ ಅಂದರೆ ಯಾರು ಹಸುಗಳು ಅಥವಾ ಎಮ್ಮೆಗಳನ್ನು ಸಾಕಿದ್ದಾರೋ ಅಥವಾ ನಿಮ್ಮ ಮನೆಯಲ್ಲಿ ಅಥವಾ ನಿಮ್ಮ ಮನೆ ಹಿಂದೆ ಇರುವ ಜಾಗದಲ್ಲಿ ಅಥವಾ ಎಲ್ಲಿ ನಿಮಗೆ ಸಂತ ಜಾಗವಿದೆಯೋ ಅಲ್ಲಿ ನೀವು ದನದ ಕೊಟ್ಟಿಗೆ ಅಥವಾ ದನದ ಶೆಡ್ ಅನ್ನು ನಿರ್ಮಾಣ ಮಾಡಲು ಪಂಚಾಯಿತಿ ವತಿಯಿಂದ ರೈತರಿಗೆ ಮತ್ತು ಆಸಕ್ತರಿಗೆ ಸಹಾಯಧನ ನೀಡಲಾಗುತ್ತದೆ.
ಸಾಮಾನ್ಯ ವರ್ಗದ ಜನರಿಗೆ ಸರಿ ಸುಮಾರು ರೂಪಾಯಿ 20,000 ರೂಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ವತಿಯಿಂದ ಅದನ್ನು ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸುಮಾರು 43,000ರೂಗಳ ಸಹಾಯಧನವನ್ನು ಈ ರಾಜ್ಯ ಸರ್ಕಾರದ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಪಂಚಾಯಿತಿ ಕಡೆಯಿಂದ ನೀಡುವ ಈ ಒಟ್ಟು ಮೊತ್ತದಲ್ಲಿ ಅಂದರೆ ಈ 43,000ರೂ.ಗಳಲ್ಲಿ, ಫಲಾನುಭವಿ ರೈತರಿಗೆ ಸುಮಾರು 8,996ರೂ.ಗಳನ್ನು ಅವರ ಕೂಲಿ ಮೊತ್ತವಾಗಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಈ ಸಹಾಯಧನವನ್ನು ನರೇಗಾ ಕಾರ್ಡ್ ಹೊಂದಿರುವ ರೈತರಿಗೆ ಅಥವಾ ಅರ್ಜಿದಾರರಿಗೆ ಮಾತ್ರ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಶೆಡ್ ಅಥವಾ ದನದ ಕೊಟ್ಟಿಗೆ ನಿರ್ಮಾಣ ಮಾಡಲಿಕ್ಕೆ ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಉಳಿದ ಮೊತ್ತವನ್ನು ಅಂದರೆ ಉಳಿದ 34,000ರೂ.ಗಳನ್ನು ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಾಮಾನ್ಯ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಇದರ ಅರ್ಧ ಮೊತ್ತ ಸಿಗುತ್ತಿತ್ತು. ಅಂದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ರೂಪಾಯಿ 8,996ರೂ.ಗಳ ಕೂಲಿಯನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಲ್ಲರಿಗೂ ಸಮಾನವಾದ ಕೂಲಿಯನ್ನು ನೀಡಲಾಗುತ್ತದೆ.
ಆದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಿಗುವ ಉಳಿದ 34,000ರೂ.ಗಳ ಹಣದಲ್ಲಿ ಸಾಮಾನ್ಯ್ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಈ 34,000ರೂ.ಗಳಲ್ಲಿ ಕೇವಲ ಅರ್ಧ ಮೊತ್ತವನ್ನು ನೀಡಲಾಗುತ್ತಿತ್ತು.
ಅಂದರೆ ಸರಿಸುಮಾರು 20,000ರೂ.ಗಳನ್ನು ಸಾಮಾನ್ಯ ವರ್ಗದವರಿಗೆ ಅಥವಾ ಜನರಲ್ ಕೆಟಗರಿಯವರಿಗೆ ಈ ಯೋಜನೆಯ ಅಡಿಯಲ್ಲಿ ಪಂಚಾಯಿತಿಯ ಕಡೆಯಿಂದ ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭ್ಯರ್ಥಿಗಳಿಗೆ ರೂಪಾಯಿ 43,000ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ.
ರೈತರು ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ದನದ ಕೊಟ್ಟಿಗೆ ಅಥವಾ ಶೆಡ್ ನ ಅಳತೆ ಎಷ್ಟಿರಬೇಕು?
• ರೈತರು ಈ ಯೋಜಯಡಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ಕಟ್ಟುವ ದನದ ಕೊಟ್ಟಿಗೆ ಅಥವಾ ಶೆಡ್ 5 ಫೀಟ್ ಎತ್ತರದ ಗೋಡೆಯನ್ನು ಹೊಂದಿರಬೇಕು.
• ಹಸುಗಳಿಗೆ ಮೇವು ಹಾಗೂ ನೀರಿನ ವ್ಯವಸ್ಥೆಗಾಗಿ ಗೋದಲಿಯನ್ನು ನಿರ್ಮಾಣ ಮಾಡಿರಬೇಕು.
• ಜಾನುವಾರುಗಳಿಗೆ ಶೆಡ್ ನಲ್ಲಿ ಗಾಳಿ ಮತ್ತು ಬೆಳಕು ಆಡಲು ಕೊಟ್ಟಿಗೆಗೆ ಶೆಡ್ ಶೀಟ್ಗಳನ್ನು ಹಾಕಬೇಕು.
•ಇವೆಲ್ಲವುದರ ಜೊತೆಗೆ ನೀವು ಈ ಯೋಜನೆಯಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನರೇಗಾ ನಾಮಫಲಕವನ್ನು ಕಡ್ಡಾಯವಾಗಿ ಹಾಕಬೇಕಾಗಿರುತ್ತದೆ.
• ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಿಕೊಳ್ಳಲು ರೈತರು ಮೊದಲನೆಯದಾಗಿ ತಮಗೆ ಸಂಬಂಧಪಟ್ಟ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ. ಅಂದರೆ ಈ ಯೋಜನೆಯಡಿಯಲ್ಲಿ ಯಾರ್ಯಾರು ಸಹಾಯ ಧನವನ್ನು ಪಡೆಯಬೇಕೆಂದು ಕೊಂಡಿದ್ದರೋ ಅಥವಾ ಈ ಯೋಜನೆಯ ಫಲಾನುಭವಿಯಾಗಲು ಬಯಸುವಂತಹ ಅರ್ಜಿದಾರರು ತಮ್ಮ ಹೆಸರನ್ನು ನಿಮಗೆ ಹತ್ತಿರವಿರುವ ಅಥವಾ ನಿಮಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಬೇಕಾಗಿರುತ್ತದೆ.
• ಪ್ರತಿವರ್ಷ ಜಾರಿಗೊಳಿಸುವ ಈ ಯೋಜನೆಯಲ್ಲಿ ನಿಮ್ಮ ಹೆಸರನ್ನು ಸೇರಿಸಬೇಕು. ಅಂದಾಗ ಮಾತ್ರ ನೀವು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
• ಇದಾದನಂತರ ಸಂಬಂಧಪಟ್ಟ ಪಂಚಾಯಿತಿಯ ಅಧಿಕಾರಿಗಳು ಬಂದು ನೀವು ದನದ ಕೊಟ್ಟಿಗೆ ಅಥವಾ ಶೆಡ್ಕಟ್ಟಬೇಕೆಂದು ಕೊಂಡಿರುವ ಖಾಲಿ ಜಾಗಕ್ಕೆ ಬಂದು ಭೇಟಿ ನೀಡಿ, ಆ ಜಾಗದ GPS ಅನ್ನು ಮಾಡಿ, ಆ ಜಾಗದ ಸರ್ವೆ ಮಾಡಿ ನಿಮಗೆ ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಅನುಮತಿಯನ್ನು ನೀಡುತ್ತಾರೆ.
• ಅದಾದ ನಂತರ ನೀವು ಕೊಟ್ಟಿಗೆ ಕಟ್ಟಲು ಬೇಕಾಗುವ ಸಾಮಗ್ರಿಗಳನ್ನು ಪಂಚಾಯಿತಿ ನೀಡುವ ಸಹಾಯಧನದಲ್ಲಿ ತಂದು ನಿಮ್ಮ ಕೊಟ್ಟಿಗೆ ಕಟ್ಟುವ ಕೆಲಸವನ್ನು ಪ್ರಾರಂಭಿಸಬಹುದು.
• ನೀವು ಕೊಟ್ಟಿಗೆ ಕಟ್ಟುವ ಕೆಲಸವನ್ನು ಶುರು ಮಾಡುವ ಮೊದಲು ಒಂದು ಕಲ್ಲಿನ ಬೋರ್ಡನ್ನು ಅಂದರೆ ನರೇಗಾ ನಾಮಫಲಕವನ್ನು ಬರೆಸಬೇಕಾಗಿರುತ್ತದೆ.
ಈ ಬೋರ್ಡ್ ನೀವು ಯಾವ ಯೋಜನೆಯಡಿ ಈ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದೀರಿ.ಎಂಬುದನ್
ಇದರಲ್ಲಿ ನೀವು ಯೋಜನೆ ಪಡೆಯುತ್ತಿರುವ ವರ್ಷ, ಗ್ರಾಮ ಪಂಚಾಯಿತಿ ಹೆಸರು, ತಾಲೂಕು ಮತ್ತು ಜಿಲ್ಲೆಯನ್ನು ಒಳಗೊಂಡಿರುತ್ತದೆ.
ಈ ನರೇಗಾ ನಾಮಫಲಕಾದಲ್ಲಿ ಫಲಾನುಭವಿಯ ಹೆಸರು ನಮೂದಿಸಲಾಗಿರುತ್ತದೆ.
ಹಾಗೂ ಅದೇ ರೀತಿ ಫಲಾನುಭವಿಯು ಈ ನರೇಗಾ ಉದ್ಯೋಗ ಖಾತರಿ ಯೋಜನೆಯನ್ನು ಪಡೆದುಕೊಳ್ಳುತ್ತಿರುವ ಕಾಮಗಾರಿ ಸಂಕೇತವನ್ನು ಒಳಗೊಂಡಿರುತ್ತದೆ.
ಈ ನರೇಗಾ ನಾಮಫಕದಲ್ಲಿ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಒಟ್ಟು ಬಿಡುಗಡೆಯಾದ ಮೊತ್ತ, ಎಷ್ಟು ಬಿಡುಗಡೆಯಾಗಿದೆ? ಯಾವುದಕ್ಕೆಲ್ಲ ಬಿಡುಗಡೆಯಾಗಿದೆ? ಖರ್ಚಾದ ಮೊತ್ತ ಮತ್ತು ಕೊಟ್ಟಿಗೆ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳ ಮೊತ್ತ, ಎಲ್ಲವನ್ನು ಒಳಗೊಂಡಿರುತ್ತದೆ.
ನರೇಗಾ ಯೋಜನೆಯ ಅಡಿಯಲ್ಲಿ ಸಹಾಯಧನ ಪಡೆದುಕೊಳ್ಳಲು ದನದ ಕೊಟ್ಟಿಗೆ ಹೇಗಿರಬೇಕು? ಅದರ ಉದ್ದ ಮತ್ತು ಅಳತೆಗಳು ಎಷ್ಟಿರಬೇಕು?
* ದನದ ಕೊಟ್ಟಿಗೆಯ ಅಗಲವು ಸುಮಾರು ನಾಲ್ಕು ಮೀಟರುಗಳಷ್ಟು ಇರಬೇಕು.
* ದನದ ಕೊಟ್ಟಿಗೆ ಅಥವಾ ಶೆಡ್ನ ಉದ್ದವು ಏಳು ಮೀಟರ್ಗಳಷ್ಟು ಇರಬೇಕು.
*ಅಂದರೆ ಸಾಮಾನ್ಯವಾಗಿ 22 ಅಡಿ ಉದ್ದ ಮತ್ತು13 ಅಡಿ ಅಗಲವನ್ನು ಹೊಂದಿರಬೇಕಾಗುತ್ತದೆ.
* ದನದ ಕೊಟ್ಟಿಗೆಯು ಕನಿಷ್ಠ ಅಗಲ ಮತ್ತು ಉದ್ದವಗಳನ್ನು ಹೊಂದಿರಬೇಕಾಗುತ್ತದೆ.
* ಇದಕ್ಕಿಂತ ಕಡಿಮೆ ಉದ್ದ ಮತ್ತು ಅಗಲಗಳ ಅಳತೆಗಳನ್ನು ಹೊಂದಿದ್ದರೆ ನಿಮಗೆ ಸಿಗುವ ಸಹಾಯಧನದಲ್ಲಿ ಮೊತ್ತವು ಕಡಿಮೆಯಾಗುತ್ತದೆ. ಅಂದರೆ ನಿಮಗೆ ಸಿಗುತ್ತಿರುವ ಸಾಮಗ್ರಿ ಮೊತ್ತದಲ್ಲಿ ಸಹಾಯಧನ ಕಡಿಮೆಯಾಗುತ್ತದೆ.
* ಇದಕ್ಕಿಂತ ಜಾಸ್ತಿ ಉದ್ದ ಮತ್ತು ಅಗಲಗಳನ್ನು ಹೊಂದಿರಬಹುದು. ಆದರೆ ಈ ಕನಿಷ್ಠ ಅಳತೆಗಳ ಕೆಳಗೆ ಅಳತೆಗಳನ್ನು ಹೊಂದಿರಬಾರದು.
* ದನದ ಕೊಟ್ಟಿಗೆ ನಿರ್ಮಾಣದ ಸಮಯದಲ್ಲಿ ದನಗಳನ್ನು ಕಟ್ಟುವ ಜಾಗದಲ್ಲಿ ನೆಲವನ್ನು ಕಾಂಕ್ರೀಟ್ ನಿಂದ ಮಾಡಿರಬೇಕಾಗಿರುತ್ತದೆ. ಯಾವುದೇ ತರದ ಚಪ್ಪಡಿ ಕಲ್ಲುಗಳನ್ನು ಮತ್ತು ಇನ್ನಿತರೆ ರಬ್ಬರ್ ಮ್ಯಾಟ್ ಅಥವಾ ನೆಲಹಾಸುಗಳನ್ನು ಬಳಸುವಂತಿಲ್ಲ. ನೀವು ನೆಲವನ್ನು ಕಾಂಕ್ರಿಟ್ ನಿಂದ ಮಾಡಿರದಿದ್ದರೆ ನಿಮಗೆ ಸಹಾಯಧನವನ್ನು ನೀಡಲು ಬರುವುದಿಲ್ಲ.
ಮೊದಲು ನೀವು ದನದ ಕೊಟ್ಟಿಗೆ ನಿರ್ಮಾಣ ಮಾಡಬೇಕೆಂದುಕೊಳ್ಳುವ ಖಾಲಿ ಜಾಗದಲ್ಲಿ ಫೋಟೋ ತೆಗೆಯಬೇಕು. ನಂತರ 40MM ಜೆಲ್ಲಿ ಕಲ್ಲು ಅಂದರೆ(ಕಡಿಗಳು) ಗಳನ್ನು ಹಾಕಿ ಸಮತಟ್ಟು ಮಾಡಬೇಕಾಗಿರುತ್ತದೆ. ಇದಾದ ನಂತರ ಅದರ ಮೇಲೆ ಕಾಂಕ್ರೆಟ್ ನಿಂದ ನೆಲವನ್ನು ಮುಚ್ಚಬೇಕಾಗುತ್ತದೆ.
* ದನಗಳ ಕೊಟ್ಟಿಗೆಯಲ್ಲಿ ಮೇವು ಅಥವಾ ನೀರಿನ ಸೌಲಭ್ಯಕ್ಕಾಗಿ ಗೋದಲಿಯನ್ನು ಇಟ್ಟಿಗೆಯನ್ನು ಬಳಸಿ ಕಟ್ಟಬೇಕು. ಕಟ್ಟಿದ ನಂತರ ಇಟ್ಟಿಗೆಗಳನ್ನು ಪ್ಲಾಸ್ಟರ್ ನಿಂದ ಮುಚ್ಚಬೇಕು.
* ಹಾಗೆಯೇ ದನಗಳನ್ನು ಗೋದಲಿಗೆ ಕಟ್ಟಲು ಕಬ್ಬಿಣದ ಬಳೆಗಳನ್ನು ಸಹ ಬಳಸಬಹುದು.
* ದನಗಳ ಮೂತ್ರ ಮತ್ತು ಕೊಟ್ಟಿಗೆ ತೊಳೆದ ನಂತರ ಅದರ ನೀರು ಸುಲಭವಾಗಿ ಹೋಗಲು ಒಂದು ಗುಂಡಿ ಅಥವಾ ಒಂದು ಚರಂಡಿ ವ್ಯವಸ್ಥೆಯನ್ನು ಮಾಡಬೇಕಾಗಿರುತ್ತದೆ. ಅಥವಾ ನಿಮಗೆ ಚರಂಡಿ ವ್ಯವಸ್ಥೆ ಇಲ್ಲದಿದ್ದಲ್ಲಿ ನೀರನ್ನು ಇಂಗು ಗುಂಡಿಗೆ ಬಿಡಬಹುದು.
* ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ದನದ ಕೊಟ್ಟಿಗೆಯ ಸುತ್ತಲೂ ಗೋಡೆಯನ್ನು ಕಟ್ಟಬೇಕಾಗುತ್ತದೆ.
* ಈ ಕೊಟ್ಟಿಗೆಯನ್ನ ನಿರ್ಮಾಣ ಮಾಡಲು ಸಾಮಾನ್ಯವಾಗಿ 22,000ರೂ.ಗಳ ಖರ್ಚು ಬರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಒಟ್ಟು ಸಹಾಯಧನ 43,000ರೂ.ಗಳು ಬರುತ್ತದೆ.
ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನ ಹೆಚ್ಚಳ ಮಾಡಿದ ನಂತರ ಒಟ್ಟು ಸಹಾಯಧನವಾಗಿ 57,000 ರೂ ಸಿಗುತ್ತದೆ. ಈ ಮೊತ್ತವನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೂ ಸಮವಾಗಿ ನೀಡಲಾಗುತ್ತದೆ. ಈ ಮೊತ್ತದಲ್ಲಿ ಅಂದರೆ ಒಟ್ಟಾರೆ 57,000ರೂ.ಗಳಲ್ಲಿ ಸರಿ ಸುಮಾರು 10,556ರೂ.ಗಳನ್ನು ಕೂಲಿ ಮೊತ್ತವಾಗಿ ಈ ಯೋಜನೆಯಡಿ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಸುಮಾರು 46,644ರೂ.ಗಳನ್ನು ಈ ಯೋಜನೆಯಡಿಯಲ್ಲಿ ದನದ ಕೊಟ್ಟಿಗೆ ಅಥವಾ ದನದಶೆಡ್ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಈ ಯೋಜನೆಯ ಅಡಿಯಲ್ಲಿ ಸಹಾಯಧನ ನೀಡಲಾಗುತ್ತದೆ.
ಫಲಾನುಭವಿಗಳು ಜಾನುವಾರು ಶೆಡ್ ಅಥವಾ ಕೊಟ್ಟಿಗೆಯನ್ನು ನಿರ್ಮಿಸಿಕೊಳ್ಳಲು,
#ಕನಿಷ್ಠ 4 ಜಾನುವಾರುಗಳನ್ನು ಹೊಂದಿರಬೇಕು.
#ಸಂಬಂಧಪಟ್ಟ ಪಶುವೈದ್ಯಾಧಿಕಾರಿಗಳಿಂದ ಜಾನುವಾರು ಇರುವ ಕುರಿತ ದೃಢೀಕರಣ ಪತ್ರವನ್ನು ಪಡೆಯಬೇಕು.
#ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಉದ್ಯೋಗ ಖಾತರಿ ಚೀಟಿ ಪುಸ್ತಕವನ್ನು ಹೊಂದಿರಬೇಕು.
#ಈ ಮೇಲಿನ ಉಲ್ಲೇಕಿಸಿದ ದಾಖಲಾತಿಗಳೊಂದಿಗೆ ಸ್ಥಳೀಯ ಗ್ರಾಮ ಪಂಚಾಯತಿಗೆ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
# ಗ್ರಾಮ ಪಂಚಾಯಿತಿಯವರ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಫಲಾನುಭವಿಯ ಹೆಸರು ಸೇರಿಸಿಕೊಂಡು ಮೇಲಾಧಿಕಾರಿಗಳಿಂದ ಅನುಮೋದನೆ ಪಡೆದ ನಂತರ ರೈತರು ಅವರ ದನದ ಕೊಟ್ಟಿಗೆಯ ಕಾಮಗಾರಿಯನ್ನು ಪ್ರಾರಂಭಿಸಬೇಕು.
# ಈ ಹಿಂದೆ ಉದ್ಯೋಗ ಖಾತರಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 43,000ರೂ.ಗಳ ಸಹಾಯಧನ ಹಾಗೂ ಸಾಮಾನ್ಯ ವರ್ಗದವರಿಗೆ 19,000 ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನೀಡಲಾಗುತ್ತಿತ್ತು.
ಈ ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚಿಸಿದ ಸಹಾಯಧನದ ಬಗ್ಗೆ ತಿಳಿಯಬೇಕೆಂದರೆ,
ಸಾಮಾನ್ಯ ವರ್ಗದವರಿಗೂ ಸಹ 57,000ರೂ.ಗಳ ಸಹಾಯಧನ ಈ ಯೋಜನೆ ಅಡಿಯಲ್ಲಿ ನೀಡಲಾಗುವುದು. ಸಾಮಾನ್ಯವಾಗಿ 4 ಕ್ಕಿಂತ ಹೆಚ್ಚು ಜಾನುವಾರು ಸಾಕಣೆ ಮಾಡುವವರು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.
ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಜಾನುವಾರು ಸೆಡ್ ನಿರ್ಮಾಣಕ್ಕೆ ಸಹಾಯಧನದ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ರಾಜ್ಯದಲ್ಲಿ ಈ ಯೋಜನೆಯ ಲಾಭವನ್ನು ಪಡೆದುಕೊಂಡು ಸಹಸ್ರಾರು ಕುಟುಂಬಗಳು ಶೆಡ್ ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡು ಜಾನುವಾರು ಸಾಕಣೆಯೊಂದಿಗೆ ಉತ್ತಮ ಆದಾಯ ಮಾಡಿಕೊಳ್ಳುತ್ತಿದ್ದಾರೆ.
ಇದೀಗ ದನದ ಶೆಡ್ ನಿರ್ಮಾಣ ಮಾಡಿಕೊಳ್ಳಲು ಸಹಾಯ ಧನ ಹೆಚ್ಚಿಸಿದೆ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಅಥವಾ ಸಂಬಂಧಪಟ್ಟ ಪಂಚಾಯಿತಿಯನ್ನು ಸಂಪರ್ಕಿಸಿರಿ.
]]>*ಜುಲೈ ಅಗಸ್ಟ್ ತಿಂಗಳ 4000 ರೂಪಾಯಿ ಗೃಹಲಕ್ಷ್ಮಿ ಹಣ (Gruhalakshmi hana)ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ*
ದಸರಾ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಗಿಫ್ಟ್
ಇನ್ನೆರಡು ದಿನದಲ್ಲಿ ಗೃಹಲಕ್ಷ್ಮಿ ಹಣ(Gruhalalshmi amount) ಖಾತೆಗೆ ಜಮೆ
“ಗೃಹಲಕ್ಷ್ಮಿ ಯೋಜನೆಯ(Gruhalakahmi yojane) ಜುಲೈ ಮತ್ತು ಆಗಸ್ಟ್ ತಿಂಗಳ ಹಣವನ್ನು ಬಿಡುಗಡೆ ಮಾಡಲಾಗಿದೆ. ಎರಡು ಕಂತಿನಲ್ಲಿ ಹಣ ಬಿಡುಗಡೆ ಮಾಡಲಾಗಿದ್ದು, ಅಕ್ಟೋಬರ್ 7 ಮತ್ತು 9 ರಂದು ನಿಮ್ಮ ಖಾತೆಗೆ ಹಣ ಜಮೆ ಆಗಲಿದೆ”
- ಲಕ್ಷ್ಮಿ ಹೆಬ್ಬಾಳ್ಳರ್,
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು
ಇಲ್ಲಿಯವರೆಗೂ ಎಷ್ಟು ಕಂತಿನ ಗೃಹಲಕ್ಷ್ಮಿ ಹಣ ಜಮಾ ಆಗಿದೆ ಎಂದು ತಿಳಿಯಲು ಹೀಗೆ ಮಾಡಿ
ಮೊದಲು DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ (FRUITS ID) ಪ್ರೊಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ(Parihara Portal) ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ(Direct benefit transfer) ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುದು.
ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.
ಬೆಳೆ ಹಾನಿ ಪರಿಹಾರ(Bele hani parihara) ಪಡೆದುಕೊಳ್ಳಲು (FRUITS ID) ಪ್ರೊಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೊಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ (FRUITS ID) ಪ್ರೊಟ್ಸ್ ಐಡಿ ಸೃಜಿಸಿಕೊಳ್ಳಬಹುದು. (FRUITS ID) ಪ್ರೊಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.
ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್/Aadhaar number ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ
ಕೃಷಿ ನಮ್ಮ ದೇಶದ ಬೆನ್ನೆಲುಬು ಇದ್ದಂತೆ. ಹೈನುಗಾರಿಕೆ(Dairy farming)ಮತ್ತು ಕೃಷಿಯ ಆಧಾರದ ಮೇಲೆ ಹಲವಾರು ಕುಟುಂಬಗಳು ಬದುಕುತ್ತಿವೆ. ದೇಶಕ್ಕೆ ಅನ್ನ ನೀಡುವ ರೈತರ ಶ್ರೇಯೋಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನೇಕ ಕಲ್ಯಾಣ ಅಭಿವೃದ್ಧಿ ಕ್ರಮಗಳನ್ನ ಕೈಗೊಳ್ಳುತ್ತಿವೆ.
ಹೈನುಗಾರಿಕೆಯನ್ನ ಮತ್ತಷ್ಟು ವಿಸ್ತರಿಸಲು ಕೇಂದ್ರ ಸರ್ಕಾರ ಅಗತ್ಯ ಬೆಂಬಲ ಮತ್ತು ಸಹಕಾರ ನೀಡುತ್ತಿದೆ. ಇದರ ಅಂಗವಾಗಿ ಹೈನುಗಾರರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲು 'ಜಾನುವಾರು ಸಾಲ ಯೋಜನೆ' (Januvaru sala yojane)ಯೋಜನೆ ಜಾರಿಗೆ ತರಲಾಗುತ್ತಿದೆ. ಕೇಂದ್ರವು ಫಲಾನುಭವಿಗಳಿಗೆ ಶೇ 90ರಷ್ಟು ಸಹಾಯಧನದೊಂದಿಗೆ ಸಾಲ ನೀಡುತ್ತಿದೆ.
ಮೊದಲ ಬಾರಿಗೆ ಹೈನುಗಾರರಿಗೆ ಪಶು ಸಾಲ ಯೋಜನೆ ಅಡಿಯಲ್ಲಿ 2 ಲಕ್ಷದವರೆಗೆ ಸಾಲ ಸಿಗಲಿದೆ. ಈ ಯೋಜನೆಯಡಿ ಜಾನುವಾರು ಖರೀದಿ, ಮೇವು ತಯಾರಿ, ಜಾನುವಾರುಗಳಿಗೆ ಆಶ್ರಯ, ಮೇವು ಮತ್ತಿತರ ವೆಚ್ಚಗಳಿಗೆ ಆರ್ಥಿಕ ಭರವಸೆ ನೀಡಲಾಗುತ್ತದೆ. ದೇಶದ ದೂರದ ಪ್ರದೇಶಗಳ ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಬ್ಯಾಂಕ್ಗಳು ಈ ಯೋಜನೆಯನ್ನು ಜಾರಿಗೊಳಿಸುತ್ತಿವೆ.
ಇಂತಹ ಬ್ಯಾಂಕ್ಗಳಲ್ಲಿ..!
ಸರ್ಕಾರಿ ಮತ್ತು ಖಾಸಗಿ ಬ್ಯಾಂಕ್ಗಳು ಈ ಯೋಜನೆಯಡಿ ಪಾಡಿ ರೈತರಿಗೆ ಸಾಲ ನೀಡುತ್ತಿವೆ. ಜಾನುವಾರುಗಳ ಸಂಖ್ಯೆಗೆ ಅನುಗುಣವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 60 ಸಾವಿರದಿಂದ ಸಾಲ ನೀಡುತ್ತಿದೆ. ಇದಲ್ಲದೆ, ಎಚ್ಡಿಎಫ್ಸಿ ಬ್ಯಾಂಕ್ ಎಮ್ಮೆಗೆ(Buffalo) 80 ಸಾವಿರ ಮತ್ತು ಹಸುವಿಗೆ(cow) 60 ಸಾವಿರದವರೆಗೆ ಅರ್ಜಿ ಸಲ್ಲಿಸುತ್ತಿದೆ. ಜಾನುವಾರುಗಳ ಸಂಖ್ಯೆಗೆ ಅನುಗುಣವಾಗಿ ಆ ಮೊತ್ತವೂ ರೈತರ ಖಾತೆಗೆ ಜಮೆಯಾಗಲಿದೆ. ಮತ್ತು ಬ್ಯಾಂಕ್ ಆಫ್ ಬರೋಡಾ ಕಿಸಾನ್ ಕ್ರೆಡಿಟ್ ಕಾರ್ಡ್ (Kisan credit card)ಯೋಜನೆಯಡಿ 10 ಲಕ್ಷದವರೆಗೆ ಸಾಲವನ್ನು ನೀಡುತ್ತಿದೆ.
https://karnatakabank.com/agri-rural/kisan-credit-card
ಅಗತ್ಯವಿರುವ ಅರ್ಹತೆಗಳು.!
ಈ ಯೋಜನೆಯು ವರ್ಷಕ್ಕೊಮ್ಮೆ ರೈತರಿಗೆ ಅನ್ವಯಿಸುತ್ತದೆ. ಒಮ್ಮೆ ಸಾಲ ಪಡೆದು ನಿಗದಿತ ಅವಧಿಯೊಳಗೆ ಯಾವುದೇ ದಂಡವಿಲ್ಲದೆ ಮರುಪಾವತಿ ಮಾಡಿದರೆ ಮುಂದಿನ ಸಾಲದ ಮಿತಿ ಹೆಚ್ಚಾಗುತ್ತದೆ. ರೈತರು ಭಾರತೀಯ ಪ್ರಜೆಗಳಾಗಿರಬೇಕು. ಪಶುಪಾಲನೆಯಲ್ಲಿ ಅನುಭವ ಹೊಂದಿರಬೇಕು.
ಅಗತ್ಯವಿರುವ ದಾಖಲೆಗಳು.!
ಅರ್ಜಿದಾರರು ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ಪಾಸ್ಬುಕ್, ಪ್ಯಾನ್ ಕಾರ್ಡ್, ವಾಸಸ್ಥಳ, ಆದಾಯ, ಜಾತಿ ಪ್ರಮಾಣಪತ್ರಗಳು, ಜಾನುವಾರು ಪ್ರಮಾಣಪತ್ರಗಳು, ಜಮಾಬಂದಿಯಂತಹ ಜಮೀನು ದಾಖಲೆಗಳು, ಇತ್ತೀಚಿನ ಪಾಸ್ಪೋರ್ಟ್, ಆಧಾರ್ ಲಿಂಕ್ ಮಾಡಿದ ಮೊಬೈಲ್ ಸಂಖ್ಯೆಗಳನ್ನು ಬ್ಯಾಂಕ್ ಕೋರಿದ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಅಪ್ಲಿಕೇಶನ್ ಪ್ರಕ್ರಿಯೆ.!
ಪಶು ಸಾಲ ಯೋಜನೆ ನೀಡುವ ನಿಮ್ಮ ಸಮೀಪದ ಯಾವುದೇ ಸಾರ್ವಜನಿಕ ಅಥವಾ ಖಾಸಗಿ ಬ್ಯಾಂಕ್ಗೆ ಹೋಗಿ ಮತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ. ಅರ್ಜಿ ನಮೂನೆಯನ್ನು ತೆಗೆದುಕೊಂಡು ಅದರಲ್ಲಿ ನಮೂದಿಸಿರುವ ಮಾಹಿತಿಯನ್ನು ಭರ್ತಿ ಮಾಡಿ. ಅಗತ್ಯ ದಾಖಲೆಗಳೊಂದಿಗೆ ಅಧಿಕಾರಿಗಳಿಗೆ ಸಲ್ಲಿಸಬೇಕು. ಬ್ಯಾಂಕ್ ಮ್ಯಾನೇಜರ್ ನಿಮ್ಮ ಅರ್ಜಿಯನ್ನು ಪರಿಶೀಲಿಸುತ್ತಾರೆ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರೈಸಿದರೆ ಸಾಲವನ್ನು ನೀಡುತ್ತಾರೆ.
1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.
ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.
ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ(poultry), ಕುರಿ(Sheep), ಮೇಕೆ(goat), ಹಂದಿ ಸಾಕಾಣಿಕೆ ಮತ್ತು ರಸಮೇವು(Silage) ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.
National livestock mission
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ
(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)
ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ (Kisan credit card)ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟ್ರೀಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು (KCC)ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.
ಅವಶ್ಯಕ ದಾಖಲಾತಿಗಳು :-
1)ಆಧಾರ(Aadhaar card)
2)ಪಹಣಿ ಪತ್ರ(RTC)
3)ಬ್ಯಾಂಕ್ಖಾತೆ ಸಂಖ್ಯೆ(Bank account number)
ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು
4)ಭಾವ ಚಿತ್ರ(Photo)
ಕ್ರ.ಸಂ |
ಘಟಕ |
ಸೌಲಭ್ಯಗಳ ವಿವರ |
|
ಹೈನುಗಾರಿಕೆ |
|
1 |
ಮಿಶ್ರತಳಿ ದನಗಳ ನಿರ್ವಹಣೆ (1+1) |
ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ |
|
ಆ. ಸುಧಾರಿತ ಎಮ್ಮೆಗಳ ನಿರ್ವಹಣೆ |
ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ |
|
ಕುರಿ ಸಾಕಾಣಿಕೆ |
|
2 |
ಕುರಿಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ |
|
ಕುರಿಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (10) |
ರೂ. 13,000 ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (20) |
ರೂ. 26,000 ರಂತೆ ಸಾಲ ಸೌಲಭ್ಯ |
|
ಮೇಕೆ ಸಾಕಾಣಿಕೆ |
|
3 |
ಮೇಕೆಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ |
|
ಮೇಕೆಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ |
4 |
ಹಂದಿ ಸಾಕಾಣಿಕೆ (10) |
ರೂ,60,000 ರಂತೆ ಸಾಲ ಸೌಲಭ್ಯ |
|
ಕೋಳಿ ಸಾಕಾಣಿಕೆ |
|
5 |
ಮಾಂಸದ ಕೋಳಿ ಸಾಕಾಣಿಕೆ |
2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ |
|
ಮೊಟ್ಟೆ ಕೋಳಿ ಸಾಕಾಣಿಕೆ |
1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ |
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ (Vetarnary Department)ಇಲಾಖೆಗೆ ಸಂಪರ್ಕಿಸಬಹುದಾಗಿದೆ.
Vetarnary department schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಹಾಲು ಉತ್ಪಾದಕರಿಗೆ ಪ್ರೋತ್ಸಾಹ(Milk incentive)
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು (Dairy)ಪ್ರೋತ್ಸಾಹಿಸಲು ಹಸು/ ಎಮ್ಮೆ (Cow/Buffelow)ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ಲಸಿಕಾ ಕಾರ್ಯಕ್ರಮ(Vaccination program)
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ(Back yard poultry)
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು (Koli)2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಗೂಗಲ್ ಪ್ಲೇ ಸ್ಟೋರ್ ಮೂಲಕ ಅಥವಾ https://play.google.com/
ನಂತರ ರೈತ select ಮಾಡಿ
ನಂತರ ವರ್ಷ,ಋುತು, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ.
ನಂತರ ಸರ್ವೇ ನಂಬರ್ ಹಾಕಿ,ಹಿಸ್ಸಾಆಯ್ಕೆ ಮಾಡಿ,ಸಮೀಕ್ಷೆಯ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ನಂತರ ಬೆಳೆವಿವರ ವೀಕ್ಷಿಸಿ ಮೇಲೆ ಕ್ಲಿಕ್ ಮಾಡಿ
ನಂತರ photo ಮೇಲೆ ಕ್ಲಿಕ್ ಮಾಡಿದರೆ ನೀವು ಬೆಳೆದ ಬೆಳೆ ಹಾಗೂ ಫೋಟೊ ಅಪ್ಲೊಡ್ ಸರಿಯಾಗಿರುವುದನ್ನು ಪರಿಕ್ಷೀಸಿ.
ಸರಿಯಾಗಿರದಿದ್ದರೆ,ಆಕ್ಷೇಪಣೆ ಸಲ್ಲಿಸಿದರೆ ಮತ್ತೆ ಬೆಳೆ ಸಮಿಕ್ಷೆ ಮಾಡಿ ಸರಿಪಡಿಸಲು ಅವಕಾಶವಿರುತ್ತದೆ.
ಏನಿದು ಬೆಳೆ ದರ್ಶಕ ಆ್ಯಪ್?
ಈ ಅಪ್ಲಿಕೇಶನ್ ಮಾಡಿದ ಉದ್ದೇಶ ಬೆಳೆ ಸಮೀಕ್ಷೆಯನ್ನು (Crop survey)ನೋಡಲು.. ಇದರಲ್ಲಿ ನೀವು ಅಪ್ಲೋಡ್ ಮಾಡಿದ ಚಿತ್ರಗಳನ್ನು ಮತ್ತು ಸಮೀಕ್ಷೆ ಮಾಡಿದ ಸರ್ವೇಯರ್ ವಿವರಗಳನ್ನು ನೋಡಬಹುದು.
ತಮ್ಮ ಮೊಬೈಲ್ ಮೂಲಕ ಬೆಳೆಗಳ ಸಮೀಕ್ಷೆ(Bele samikshe) ಮಾಡಬಹುದು. ಅಥವಾ ನೆರೆಯ ಖಾಸಗಿ ವ್ಯಕ್ತಿಗಳ (Private resident) ಮೊಬೈಲ್ ಮೂಲಕ ಜಮೀನುಗಳ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ನಿಮ್ಮ ಜಮೀನಿನ ಸರ್ವೆ ನಂಬರ್(Survey number) ಮತ್ತು ಜಮೀನಿನ ಫೊಟೋ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಮೊಬೈಲ್ ನಲ್ಲಿ Bele darshak app ಮೂಲಕ ಕ್ಷಣಾರ್ಧದಲ್ಲಿ ನೋಡಬಹುದು. ಒಂದು ವೇಳೆ ತಪ್ಪಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು.
ಬೆಳೆ ದರ್ಶಕ್ ಆ್ಯಪ್(bele darshaka app) ಇನ್ಸ್ ಸ್ಟಾಲ್ ಮಾಡಿಕೊಂಡ ನಂತರ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಇನ್ನಿತರ ಮಾಹಿತಿ ನಮೂದಿಸಬೇಕು. ಬೆಳೆ ದರ್ಶಕ್ ಆ್ಯಪ್(Bele darshaka application) ಮೂಲಕ ಜಮೀನಿನಲ್ಲಿ ಬೆಳೆ ಸಮೀಕ್ಷೆ (Bele samikshe)ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ (Crop survey)ಸಮಯದಲ್ಲಿ ತೆಗೆಯಲಾದ ಜಿಪಿಎಸ್ ಆಧಾರಿತ (GPS Photo)ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ಅಲ್ಲದೆ ರೈತರ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ, (Mobile number)ರೈತರು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ನೋಡಬಹುದು.
ಒಂದು ವೇಳೆ ಮಾಹಿತಿ ತಪ್ಪಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು.ಮೇಲ್ವಿಚಾರಕರು ಸೂಕ್ತ ಬೆಳೆಗಳನ್ನು ದಾಖಲಿಸಿ ರೈತರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುತ್ತಾರೆ. ಇನ್ನೇಕೆ ತಡ ಒಮ್ಮೆ ನಿಮ್ಮ ಬೆಳೆ ಸಮೀಕ್ಷೆಯಲ್ಲಿ ಎಲ್ಲಾ ಸರ್ವೆ ನಂಬರ್, ಮಾಹಿತಿ ಹಾಗೂ ಫೋಟೋ ಸರಿಯಾಗಿ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಡಿ
]]>ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://youtu.be/LDdaDeWtpa4?si=B_ozWq-Bridlzqgi
ಹಾವೇರಿ ಜಿಲ್ಲೆಯ ನಮ್ಮ ರೈತರಿಗೆ ಸಂತಸದ ಸುದ್ದಿ!
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ(Pradan mantri fasal bheema yojane) 2023-24ನೇ ಸಾಲಿನಲ್ಲಿ ಖಾಸಗಿ ವಿಮೆ ಸಂಸ್ಥೆಯವರು ಮುಂಗಾರು ಹಂಗಾಮಿನಲ್ಲಿ ಹಾವೇರಿ ಜಿಲ್ಲೆಯ ಬೆಳೆ ಕಟಾವು ಪ್ರಯೋಗಗಳ(Crop cutting experiment)ಸಂಬಂಧ ರಾಜ್ಯ ಸರ್ಕಾರದ ಸಮಿತಿಯ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರದ ತಾಂತ್ರಿಕ ಸಲಹಾ ಸಮಿತಿಗೆ ಮೇಲ್ಮನವಿ ಸಲ್ಲಿಸಿದ್ದರು.
ರಾಜ್ಯದಿಂದ ಪ್ರಬಲವಾದ ವಾದವನ್ನು ಮಂಡಿಸಿದ್ದ ಫಲಶ್ರುತಿಯಾಗಿ ಆಕ್ಷೇಪಣೆಗೊಳಗಾಗಿದ್ದ ಹಾವೇರಿ ಜಿಲ್ಲೆಯ ವಿಮಾ ಘಟಕಗಳಲ್ಲಿ ಸುಮಾರು 65000 ಅರ್ಹ ರೈತ ಫಲಾನುಭವಿಗಳಿಗೆ ರೂ. 45 ಕೋಟಿ ಬೆಳೆ ವಿಮಾ (crop insurance)ಪರಿಹಾರ ಮೊತ್ತವನ್ನು ಅಂದಾಜಿಸಲಾಗಿದೆ. ಇದನ್ನು ಸದ್ಯದಲ್ಲೇ ಇತ್ಯರ್ಥಪಡಿಸಲಾಗುವುದು ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ತಿಳಿಸಿದ್ದಾರೆ.
.
ಹಾಗಾಗರೆ ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡಿ
https://youtu.be/uERN6EQVtew?si=eGOklncbI1s3Is5A
*ಜುಲೈ ಅಗಸ್ಟ್ ತಿಂಗಳ 4000 ರೂಪಾಯಿ ಗೃಹಲಕ್ಷ್ಮಿ ಹಣ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ*
ದಸರಾ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಗಿಫ್ಟ್
ಇನ್ನೆರಡು ದಿನದಲ್ಲಿ ಗೃಹಲಕ್ಷ್ಮಿ ಹಣ(Gruhalalshmi amount) ಖಾತೆಗೆ ಜಮೆ
“ಗೃಹಲಕ್ಷ್ಮಿ ಯೋಜನೆಯ(Gruhalakahmi yojane) ಜುಲೈ ಮತ್ತು ಆಗಸ್ಟ್ ತಿಂಗಳ ಹಣವನ್ನು ಬಿಡುಗಡೆ ಮಾಡಲಾಗಿದೆ. ಎರಡು ಕಂತಿನಲ್ಲಿ ಹಣ ಬಿಡುಗಡೆ ಮಾಡಲಾಗಿದ್ದು, ಅಕ್ಟೋಬರ್ 7 ಮತ್ತು 9 ರಂದು ನಿಮ್ಮ ಖಾತೆಗೆ ಹಣ ಜಮೆ ಆಗಲಿದೆ”
- ಲಕ್ಷ್ಮಿ ಹೆಬ್ಬಾಳ್ಳರ್,
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು
Gruhalakshmi list-ದಸರಾ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಗಿಫ್ಟ್, ಈ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ 2 ಕಂತಿನ 4,000 ರೂಪಾಯಿ - https://krushirushi.in/Gruhalakshmi-list-1593
ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡುವ ಹೊಸ ಡೈರೆಕ್ಟ್ ಲಿಂಕ್
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://play.google.com/store/apps/details?id=com.dbtkarnataka
ನಂತರ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
ಮಳೆಯ ಕಾರಣಕ್ಕೆ ರಾಜ್ಯಾದ್ಯಂತ 80,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶ(crop loss)ವಾಗಿದ್ದು, ವಾರದೊಳಗಾಗಿ ಎಲ್ಲಾ ರೈತರಿಗೂ ಪರಿಹಾರ(parihara) ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.
ಈ ಬಗ್ಗೆ ಮಾತನಾಡಿದ ಅವರು, "ರಾಜ್ಯಾದ್ಯಂತ ಕೃಷಿ ಬೆಳೆ 78679 ಹೆಕ್ಟೇರ್ ಹಾನಿ(bele hani)ಯಾಗಿದ್ದರೆ, ತೋಟಗಾರಿಕಾ ಬೆಳೆ 2294 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ.
ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿವೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು. ಪ್ರಸ್ತುತ ರಾಜ್ಯ ಸರ್ಕಾರದ ಬಳೆ ಇರುವ ಸಂಪನ್ಮೂಲದಲ್ಲೇ ಪರಿಹಾರ ನೀಡಲಾಗುವುದು. ಇನ್ನೂ ಒಂದೂವರೆ ತಿಂಗಳ ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆಹಾನಿ(croploss)ಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು ತದನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು' ಎಂದು ತಿಳಿಸಿದರು.
ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ದಸರಾ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಗಿಫ್ಟ್
ಇನ್ನೆರಡು ದಿನದಲ್ಲಿ ಗೃಹಲಕ್ಷ್ಮಿ ಹಣ(Gruhalalshmi amount) ಖಾತೆಗೆ ಜಮೆ
“ಗೃಹಲಕ್ಷ್ಮಿ ಯೋಜನೆಯ(Gruhalakahmi yojane) ಜುಲೈ ಮತ್ತು ಆಗಸ್ಟ್ ತಿಂಗಳ ಹಣವನ್ನು ಬಿಡುಗಡೆ ಮಾಡಲಾಗಿದೆ. ಎರಡು ಕಂತಿನಲ್ಲಿ ಹಣ ಬಿಡುಗಡೆ ಮಾಡಲಾಗಿದ್ದು, ಅಕ್ಟೋಬರ್ 7 ಮತ್ತು 9 ರಂದು ನಿಮ್ಮ ಖಾತೆಗೆ ಹಣ ಜಮೆ ಆಗಲಿದೆ”
- ಲಕ್ಷ್ಮಿ ಹೆಬ್ಬಾಳ್ಳರ್,
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು
ಗೃಹಲಕ್ಷ್ಮಿ ಪಟ್ಟಿಯಲ್ಲಿ(Gruhalakshmi list)ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು, ವಿಳಾಸ, ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಈ ಪಟ್ಚಿಯಲ್ಲಿ (Gruhalakshmi list) ಮನೆಯಜಮಾನಿ ಎಂದು ಇರುವವರಿಗೆ ಸಿಗಲಿದೆ 2000 ರೂಪಾಯಿ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ
ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ತರಬೇತಿ ಕೇಂದ್ರದಲ್ಲಿ ದಿನಾಂಕ 9/10/24 ಮತ್ತು 10/10/2024 25 ರೈತರಿಗೆ ಕುರಿ ಸಾಕಾಣಿಕೆ ತರಬೇತಿ (Free sheep and goat training) ಆಯೋಜಿಸಲಾಗಿದೆ. ಆಸಕ್ತರು ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರನ್ನು ಭೇಟಿಯಾಗಿ ಹೆಸರನ್ನು ನಮೂದಿಸಲು ಕೋರಲಾಗಿದೆ.
ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದೂ.
Free dairy and vermicompost training-ಉಚಿತ ಊಟ ವಸತಿಯೊಂದಿಗೆ 10 ದಿನಗಳ ಹೈನುಗಾರಿಕೆ,ಎರೆಹುಳು ಗೊಬ್ಬರ ತಯಾರಿಕೆ ತರಬೇತಿ-Uchitha hainugarike tharabethi
ಬ್ಯಾಂಕ್ ಆಫ್ ಬರೋಡ ಸ್ವ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ18 - 45 ವಯೋಮಾನದವರಿಗೆ *ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ* (free dairy and Vermicompost training) ತರಬೇತಿಯನ್ನು ದಿನಾಂಕ *14.10.2024 ರಿಂದ 23.10.2024* ವರೆಗೆ 10 ದಿನಗಳ ಕಾಲ ಆಯೋಜಿಸಲಾಗಿದೆ.
ತರಬೇತಿಯಲ್ಲಿ ಕಲಿಸುವ ವಿಷಯಗಳು::
1. ಹೈನುರಾಸುಗಳ ತಳಿಗಳು (Dairy breeds)
2. ರೋಗಗಳು ಮತ್ತು ಅದರ ಲಕ್ಷಣಗಳು(Disease and their symptoms)
3. ರೋಗಗಳನ್ನು ತಡೆಗಟ್ಟುವ ಕ್ರಮಗಳು(controlling measures)
4. ಕೃತಕ ಗರ್ಭಧಾರಣೆ (Artificial Insemination)
5. ಮೇವಿನ ವಿಷಯಗಳು(Fodder)
6. ಎರೆಹುಳು ಗೊಬ್ಬರ ತಯಾರಿಕೆ (Vermicompost)
7. ಎರೆಹುಳು ನಿರ್ವಹಣೆ(Vermicompost management)
8. ಸಾವಯುವ ಕೃಷಿ ಪದ್ಧತಿಯ ಅರಿವು (Importantance of organic farming)
9. ಸಮಯದ ನಿರ್ವಹಣೆ, ಸ್ವ ಉದ್ಯೋಗದ ಮಹತ್ವ, ಸಂವಹನ ಕೌಶಲ್ಯ, ಬ್ಯಾಂಕಿಂಗ್ ವಿಷಯ ಮತ್ತು ಇನ್ನೂ ಇತರೆ ವಿಷಯಗಳ ಬಗ್ಗೆ ತಿಳುವಳಿಕೆ ನೀಡಲಾಗುವುದು.(Bank and subsidy schemes)
*ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ.*
ಹೆಸರನ್ನು ನಮೂದಿಸಲು
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://kswdcl.karnataka.gov.in/info-2/Scientific+Sheep+Rearing+Training/kn
]]>ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ ಆಧಾರ್ ಸಂಖ್ಯೆ(Aadhaar number) ಅಥವಾ ಮೊಬೈಲ್ ನಂಬರ್(Mobile number) ಅಥವಾ ಎಫ್ಐಡಿ ನಂಬರ್(FID number) ಅಥವಾ ಸರ್ವೆ ನಂಬರ್(Survey number) ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ಸಂಖ್ಯೆ(Aadhaar number) ಅಥವಾ ಮೊಬೈಲ್ ನಂಬರ್(Mobile number) ಅಥವಾ ಎಫ್ಐಡಿ ನಂಬರ್(FID number) ಅಥವಾ ಸರ್ವೆ ನಂಬರ್(Survey number) ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿ
(ಉದಾಹರಣೆಗೆ ಈ ಕೆಳಗೆ ಆಧಾರ್ ನಂಬರ್ ಹಾಕಿ ಚೆಕ್ ಮಾಡಲಾಗಿದೆ)
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(pradan mantri kisan samman nidhi yojana) ಯೋಜನೆಯ 18 ನೇ ಕಂತನ್ನು 05/10/2024(ಶನಿವಾರ)ಮಹಾರಾಷ್ಟ್ರದ ವಾಶಿಮ್ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ(Pm Modi) ಬಿಡುಗಡೆ ಮಾಡಲಿದ್ದಾರೆ.
20,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಈ ಕಂತನ್ನು ರಾಷ್ಟ್ರವ್ಯಾಪಿ 9.4 ಕೋಟಿಗೂ ಹೆಚ್ಚು ರೈತರಿಗೆ ನೇರ ಲಾಭ ವರ್ಗಾವಣೆ(DBT) ಮೂಲಕ ವಿತರಿಸಲಾಗುವುದು.
ಫೆಬ್ರವರಿ 2019 ರಲ್ಲಿ ಪ್ರಾರಂಭವಾದ ಪಿಎಂ- ಕಿಸಾನ್(pmkisan) ಯೋಜನೆಯು ಭೂಹಿಡುವಳಿ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ಪ್ರಯೋಜನವನ್ನು ಒದಗಿಸುತ್ತದೆ. ಈ 18 ನೇ ಕಂತಿನೊಂದಿಗೆ(pmkisan 18th instalment), ಯೋಜನೆಯಡಿಯಲ್ಲಿ ಒಟ್ಟು ವಿತರಣೆಯು 3.45 ಲಕ್ಷ ಕೋಟಿ ರೂಪಾಯಿಗಳನ್ನು ಮೀರುತ್ತದೆ, ಇದು ದೇಶಾದ್ಯಂತ 11 ಕೋಟಿಗೂ ಹೆಚ್ಚು ರೈತರಿಗೆ ಪ್ರಯೋಜನವನ್ನು ನೀಡುತ್ತದೆ.
ಪಿಎಂ ಕಿಸಾನ್ 18ನೇ ಕಂತಿನ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ(How to check pmkisan 18th instalment)
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಮೊದಲು Know your status ಮೇಲೆ ಕ್ಲಿಕ್ ಮಾಡಿ
ನಂತರ know your registeration number ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ (Mobile number)ಅಥವಾ ಆಧಾರ್ ನಂಬರ್ (Aadhaar number)ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ
ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 17 ಕಂತುಗಳ ಮಾಹಿತಿ ದೊರೆಯಲಿದೆ.
Pm kisan ಹಣ ಜಮಾ ಆಗಿರದಿದ್ದರೆ ಇಲ್ಲಿದೆ ಕಾರಣ ಮತ್ತು ಪರಿಹಾರ
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
fruitspmk.gov.in ಪೋರ್ಟಲ್ ನಲ್ಲಿ |
|||
1 |
ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ |
ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು |
ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ (NIC) ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ. ಆ) ಸಮಸ್ಯಾತ್ಮಕ ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ. |
2 |
ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು |
ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ |
ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ |
3 |
ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು |
ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ |
ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ |
4 |
ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ |
ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ |
OPERATOR ಲಾಗಿನ್ (RSK, ADA office, JDA office) OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು |
5 |
01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ |
ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ |
ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ) |
6 |
Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು |
ಜಿಲ್ಲೆಗಳಲ್ಲಿ OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ |
AAO ಲಾಗಿನ್ (RSK, ADA office, JDA office) AAO ಲಾಗಿನ್ನಲ್ಲಿ ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ, ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
7 |
ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ |
ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ) |
AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ. |
8 |
PFMS rejected |
Aadhaar Number is not seeded in NPCI |
ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ |
Bank Name And IFSC Code are not related to each other |
ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ |
||
Bank Name is not as per PFMS Bank Master. |
|||
Beneficiary is rejected as Account Type is other than SB / SBA / JD |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ) |
||
Duplicate Beneficiary Name , Bank Account No and Bank Name not allowed for same scheme |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
IFSC Code either not present or currently inactive in tbl BankBranch |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
Incorrect Aadhaar Number |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
One or more mandatory tags values are missing. |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
||
Rejected by Bank, Account No does not exist in Bank/INVALID/CLOSED |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
9 |
Amount credited to Account Number-NA |
Aadhaar number based payment by GoI |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ. |
10 |
PAYMENT STOPPED BY STATE |
XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ |
ಕೇಂದ್ರ ಸರ್ಕಾರ |
11 |
Transaction failed |
ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ. |
12 |
ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ |
OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ |
ಕೇಂದ್ರ ಸರ್ಕಾರ |
13 |
ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು |
ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ. |
ಕೇಂದ್ರ ಸರ್ಕಾರ ದ pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ. |
]]>
ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(Pradan mantri kisan samman nidhi yojana)ಯೋಜನೆಯು 2019ರಲ್ಲಿ ಪ್ರಾರಂಭವಾಗಿದೆ.17ನೇ ಕಂತು ಜೂನ್ನಲ್ಲಿ ರಿಲೀಸ್ ಆಗಿತ್ತು. 16ನೇ ಕಂತು ಫೆಬ್ರವರಿಯಲ್ಲಿ ಬಿಡುಗಡೆಯಾಗಿತ್ತು.
3 ಕಂತುಗಳಲ್ಲಿ ಪಾವತಿ
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈಗ ಈ ವರ್ಷದ 2ನೇ ಕಂತು ಹಾಗೂ ಒಟ್ಟಾರೆಯಾಗಿ 18ನೇ ಕಂತು ಅಕ್ಟೋಬರ್ 5ರಂದು ಬಿಡುಗಡೆಯಾಗಲಿದೆ ಎಂದು ಪಿಎಂ ಕಿಸಾನ್ ಅಧಿಕೃತ ವೆಬ್ಸೈಟ್ (Pmkisan website)ನಲ್ಲಿ ಪ್ರಕಟಿಸಲಾಗಿದೆ.
ಹಾಗಾದರೆ ಯಾರಿಗೆಲ್ಲಾ ಸಿಗಲಿದೆ 18ನೇ (Pmkisan 18th instalment) ಕಂತು ಚೆಕ್ ಮಾಡಿಕೊಳ್ಳಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ (pmkisan 18th instalment eligible list)ದೊರೆಯಲಿದೆ
]]>
ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್,
• ಡ್ರಾಗನ್ ಪೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ
• ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಲ್ಲಿ ಅರ್ಜಿ ಸಲ್ಲಿಸಬೇಕು
ಆಸಕ್ತ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗರಿಕೆ ಇಲಾಖೆ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ಅರ್ಜಿದಾರರ ಅಧಾರ್ ಕಾರ್ಡ್ ಪ್ರತಿ.
• ಬ್ಯಾಂಕ್ ಪಾಸ್ ಬುಕ್ ಪ್ರತಿ.
• ಪೋಟೋ.
• ಪಹಣಿ/ಉತಾರ್/RTC.
ರೇಷನ್ ಕಾರ್ಡ ಪ್ರತಿ.
ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.
ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM);
ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(Pradna mantri krishi sinchayi yojane);
ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್ರವರೆಗೆ ಶೇಕಡಾ 90%) ಸಹಾಯಧನ.ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ(Farm pond), ಕೃಷಿಹೊಂಡ, ಪ್ಯಾಕ್ಹೌಸ್(Pack house), ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) (Fiber doti)ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್ (Aadhaar card) ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ
https://horticulturedir.karnataka.gov.in/info-2/Facilities+available+to+farmers/kn
ವಿವಿಧ ಯೋಜನೆಗಳು:
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ:(MGNAREGA)
ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೋಟಾ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ(farm pond), ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:(NHM)
ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ(farm pond), ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಯಾಕ್ಹೌಸ್(pack house) ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ:(Pradan mantri Krishi sinchayi yojane)
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ (Drip irrigation) ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.75 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.
ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ:
ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಮತ್ತು ಬೈಯೋಡೈಜಿಸ್ಟರ್ ಮತ್ತು ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಸಹ ಅರ್ಜಿ ಆಹ್ವಾನಿಸಲಾಗಿದೆ.
ಮೇಲ್ಕಂಡ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಲಾಗಿದೆ. ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.
]]>ಶುಂಠಿ ಬೆಳೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಬೆಳೆವಿಮೆ(Belevime hana jama)ಹಣ ಜಮಾ ಮಾಡಲಾಗುತ್ತಿದ್ದು,ಕಳೆದ ಎರಡು ದಿನಗಳಿಂದ ಎಕರೆಗೆ 37,300 ರೂಪಾಯಿಯಂತೆ ರೈತರ ಖಾತೆಗೆ ಜಮಾ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ (Bele vime status)ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ರಾಜ್ಯ ಸರ್ಕಾರವು ಸಾಮಾನ್ಯ ಜನರ ಮತ್ತು ಕೂಲಿ ಕಾರ್ಮಿಕರ ಏಳಿಗೆಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು (MGNAREGA)ಜಾರಿಗೆ ತಂದಿದ್ದಾರೆ.
ಮಹಾತ್ಮ ಗಾಂಧಿ ನರೇಗಾ ಯೋಜನೆ(NAREGA) ಅಡಿ ವೈಯಕ್ತಿಕ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಯ ಈ ಕೆಳಕಂಡ ವರ್ಗಗಳಲ್ಲಿ ಯಾವುದಾದರೂ ಒಂದು ವರ್ಗದಲ್ಲಿ ಅರ್ಹರಾಗಿರತಕ್ಕದ್ದು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ
ಅಲೆಮಾರಿ ಬುಡಕಟ್ಟುಗಳು
ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು
ಮಹಿಳಾ ಪ್ರಧಾನ ಕುಟುಂಬಗಳು
ವಿಕಲಚೇತನ ಕುಟುಂಬಗಳು
ಭೂ ಸುಧಾರಣಾ ಫಲಾನುಭವಿಗಳು
ವಸತಿ ಯೋಜನೆಗಳ ಫಲಾನುಭವಿಗಳು
ಅರಣ್ಯ ಹಕ್ಕು ಕಾಯಿದೆ 2006ರ ಫಲಾನುಭವಿಗಳು
ಸಣ್ಣ ಮತ್ತು ಅತಿ ಸಣ್ಣ ರೈತರು
ಇದನ್ನೂ ಓದಿ
1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming subsidy scheme Karnataka
https://krushirushi.in/Dairy-farming-subsidy-scheme-karnataka-1428
ಫಲಾನುಭವಿಯು ವೈಯಕ್ತಿಕ ಸೌಲಭ್ಯ ಪಡೆಯಲು
ಫಲಾನುಭವಿಯು ಕಡ್ಡಾಯವಾಗಿ ನರೇಗಾ ಯೋಜನೆಯ ಜಾಬ್ ಕಾರ್ಡ್(Job card) ಹೊಂದಿರಬೇಕು
ಫಲಾನುಭವಿಗೆ ನೀಡಲಾದ ವೈಯಕ್ತಿಕ ಕಾಮಗಾರಿಯಲ್ಲಿ ಆತನ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಾದರು ಕೆಲಸ ನಿರ್ವಹಿಸಬೇಕು
ನರೇಗಾ ಯೋಜನೆಯಡಿ ಫಲಾನುಭವಿಕೆ ನೀಡಬಹುದಾದ ವಯಕ್ತಿಕ ಕಾಮಗಾರಿಗಳ ಗರಿಷ್ಠ ಮಟ್ಟದ ಮಿತಿಯನ್ನು 2 ಲಕ್ಷಗಳಿಗೆ ನಿಗದಿಪಡಿಸಿ ಸದರಿ ಗರಿಷ್ಠ ಮೊತ್ತದ ಮಿತಿಯನ್ನು ಹೆಚ್ಚಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗಿರುತ್ತದೆ
ಯೋಜನೆ ಅಡಿ ನೊಂದಾಯಿತವಾದ ಒಂದು ವರ್ಷ ಕುಟುಂಬವು ತನ್ನ ಜೀವಿತಾವಧಿಯಲ್ಲಿ ಗರಿಷ್ಠ ಎರಡು ವರೆ ಲಕ್ಷದ ಗಳವರೆಗೆ ಯೋಜನೆ ಅಡಿ ನೀಡಲಾಗುವ ವೈಯಕ್ತಿಕ ಕಾಮಗಾರಿಗಳನ್ನು ಪಡೆದುಕೊಳ್ಳಬಹುದಾಗಿದೆ
ನರೇಗಾ ಯೋಜನೆಯಡಿ ಕೃಷಿಹೊಂಡ ನಿರ್ಮಾಣ
ನರೇಗಾ ಯೋಜನೆ ಅಡಿ ಅರ್ಹ ಫಲಾನುಭವಿಯು ಯೋಜನೆ ಅಡಿ ನಿರ್ಮಿಸಿಕೊಂಡ ಕೃಷಿಹೊಂಡ ಕಾಮಗಾರಿಯನ್ನು ಮುಂದಿನ ಐದು ವರ್ಷಗಳವರೆಗೆ ಮುಚ್ಚತಕ್ಕದ್ದಲ್ಲ.
ಒಂದು ವೇಳೆ ಫಲಾನುಭವಿಯು ಕೃಷಿ ಹೊಂಡವನ್ನು ಮುಚ್ಚಿದ್ದಲ್ಲಿ ಕೃಷಿಹೊಂಡ ನಿರ್ಮಾಣಕ್ಕಾಗಿ ತಗಲಿದ ವೆಚ್ಚ ಹಾಗೂ ಶೇಕಡ 18ರಷ್ಟು ಬಡ್ಡಿ ಸೇರಿ ಸರ್ಕಾರಕ್ಕೆ ಬರಣ ಮಾಡತಕ್ಕದ್ದು
ಕೃಷಿ ಹೊಂಡ ನಿರ್ಮಾಣ ಕಾಮಗಾರಿಯನ್ನು ಅನುಷ್ಠಾನಗೊಳಿಸುವ ಮುಂಚೆ ಫಲಾನುಭವಿಗಳಿಂದ ಮುಚ್ಚಳಿಕೆ ಪತ್ರವನ್ನು ಕಡ್ಡಾಯವಾಗಿ ಪಡೆಯತಕ್ಕದ್ದು
ಕೃಷಿ ಹೊಂಡ ಕಾಮಗಾರಿಗಳ ಕ್ರಿಯಾಯೋಜನೆಯನ್ನು ಅನುಮೋದನೆಗಾಗಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸುವಾಗ ಮುತ್ತಳಿಕೆ ಪತ್ರದ ಪ್ರತಿಯನ್ನು ಲಗತ್ತಿಸುವುದು
ಕಾಮಗಾರಿಗಳ ಆಯ್ಕೆ ಮಾಡುವಾಗ ತಾಂತ್ರಿಕವಾಗಿ ಸೈಟ್ ಫೀಸಿಬಿಲಿಟಿ ಇರುವುದನ್ನ ಖಚಿತಪಡಿಸಿಕೊಳ್ಳುವುದು
ಕೃಷಿಹೊಂಡ ಕಾಮಗಾರಿಯ ಅನುಮೋದನೆಯಾದ ಆರ್ಥಿಕ ವರ್ಷದಲ್ಲಿಯೇ ಕಡ್ಡಾಯವಾಗಿ ಪೂರ್ಣಗೊಳಿಸುವುದು
ಅನುಷ್ಠಾನಗೊಳಿಸುವಾಗ ಮೂರು ಹಂತದ Geo Tag ಮಾಡುವ ಪ್ರಕ್ರಿಯೆಯನ್ನು ನಿಗದಿ ಅವಧಿಯೊಳಗೆ ಪೂರ್ಣಗೊಳಿಸುವುದು ಕಡ್ಡಾಯವಾಗಿರುತ್ತದೆ
ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಸಿಟಿಜನ್ ಇನ್ಫಾರ್ಮಶನ್ ಬೋರ್ಡ್ ಅಳವಡಿಸತಕ್ಕದ್ದು.
ದನದ ಶೆಡ್ ನಿರ್ಮಾಣಕ್ಕೆ 57,000 ಸಹಾಯಧನ
ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ದನಗಳ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ಯ ಇಲಾಖೆಗಳು ಮೊದಲು ನೀಡುತ್ತಿರುವ ಸಹಾಯಧನವನ್ನು ಹೆಚ್ಚಳ ಮಾಡಿ, ರಾಜ್ಯದ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿಯನ್ನು ನೀಡಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಅಂದರೆ 2022ರ ಸಾಲಿನ ಏಪ್ರಿಲ್ 1 ರಿಂದ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೂಲಿ ಕಾರ್ಮಿಕರ ಮೊತ್ತವನ್ನು ರೂಪಾಯಿ 289ರೂ.ನಿಂದ ರೂಪಾಯಿ 309ರೂ.ವರೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಮಿಕರ ಕೂಲಿ ಮೊತ್ತವನ್ನು ಹೆಚ್ಚಿಸಿ ಕೂಲಿಕಾರರಿಗೆ ಸಿಹಿಸುದ್ದಿ ನೀಡಿದೆ.
ರೈತರಿಗೆ ದನದ ಕೊಟ್ಟಿಗೆ(Danada shed) ಅಥವಾ ಶೆಡ್ ನಿರ್ಮಾಣದ ಬಗ್ಗೆ ಅಂದರೆ ಯಾರು ಹಸುಗಳು ಅಥವಾ ಎಮ್ಮೆಗಳನ್ನು ಸಾಕಿದ್ದಾರೋ ಅಥವಾ ನಿಮ್ಮ ಮನೆಯಲ್ಲಿ ಅಥವಾ ನಿಮ್ಮ ಮನೆ ಹಿಂದೆ ಇರುವ ಜಾಗದಲ್ಲಿ ಅಥವಾ ಎಲ್ಲಿ ನಿಮಗೆ ಸಂತ ಜಾಗವಿದೆಯೋ ಅಲ್ಲಿ ನೀವು ದನದ ಕೊಟ್ಟಿಗೆ ಅಥವಾ ದನದ ಶೆಡ್ ಅನ್ನು ನಿರ್ಮಾಣ ಮಾಡಲು ಪಂಚಾಯಿತಿ ವತಿಯಿಂದ ರೈತರಿಗೆ ಮತ್ತು ಆಸಕ್ತರಿಗೆ ಸಹಾಯಧನ ನೀಡಲಾಗುತ್ತದೆ.
ಸಾಮಾನ್ಯ ವರ್ಗದ ಜನರಿಗೆ ಸರಿ ಸುಮಾರು ರೂಪಾಯಿ 20,000 ರೂಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ವತಿಯಿಂದ ಅದನ್ನು ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸುಮಾರು 43,000ರೂಗಳ ಸಹಾಯಧನವನ್ನು ಈ ರಾಜ್ಯ ಸರ್ಕಾರದ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಪಂಚಾಯಿತಿ ಕಡೆಯಿಂದ ನೀಡುವ ಈ ಒಟ್ಟು ಮೊತ್ತದಲ್ಲಿ ಅಂದರೆ ಈ 43,000ರೂ.ಗಳಲ್ಲಿ, ಫಲಾನುಭವಿ ರೈತರಿಗೆ ಸುಮಾರು 8,996ರೂ.ಗಳನ್ನು ಅವರ ಕೂಲಿ ಮೊತ್ತವಾಗಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಈ ಸಹಾಯಧನವನ್ನು ನರೇಗಾ ಕಾರ್ಡ್ ಹೊಂದಿರುವ ರೈತರಿಗೆ ಅಥವಾ ಅರ್ಜಿದಾರರಿಗೆ ಮಾತ್ರ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಶೆಡ್ ಅಥವಾ ದನದ ಕೊಟ್ಟಿಗೆ ನಿರ್ಮಾಣ ಮಾಡಲಿಕ್ಕೆ ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಉಳಿದ ಮೊತ್ತವನ್ನು ಅಂದರೆ ಉಳಿದ 34,000ರೂ.ಗಳನ್ನು ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಾಮಾನ್ಯ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಇದರ ಅರ್ಧ ಮೊತ್ತ ಸಿಗುತ್ತಿತ್ತು. ಅಂದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ರೂಪಾಯಿ 8,996ರೂ.ಗಳ ಕೂಲಿಯನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಲ್ಲರಿಗೂ ಸಮಾನವಾದ ಕೂಲಿಯನ್ನು ನೀಡಲಾಗುತ್ತದೆ.
ಆದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಿಗುವ ಉಳಿದ 34,000ರೂ.ಗಳ ಹಣದಲ್ಲಿ ಸಾಮಾನ್ಯ್ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಈ 34,000ರೂ.ಗಳಲ್ಲಿ ಕೇವಲ ಅರ್ಧ ಮೊತ್ತವನ್ನು ನೀಡಲಾಗುತ್ತಿತ್ತು.
ಅಂದರೆ ಸರಿಸುಮಾರು 20,000ರೂ.ಗಳನ್ನು ಸಾಮಾನ್ಯ ವರ್ಗದವರಿಗೆ ಅಥವಾ ಜನರಲ್ ಕೆಟಗರಿಯವರಿಗೆ ಈ ಯೋಜನೆಯ ಅಡಿಯಲ್ಲಿ ಪಂಚಾಯಿತಿಯ ಕಡೆಯಿಂದ ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭ್ಯರ್ಥಿಗಳಿಗೆ ರೂಪಾಯಿ 43,000ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ.
ರೈತರು ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ದನದ ಕೊಟ್ಟಿಗೆ ಅಥವಾ ಶೆಡ್ ನ ಅಳತೆ ಎಷ್ಟಿರಬೇಕು?
• ರೈತರು ಈ ಯೋಜಯಡಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ಕಟ್ಟುವ ದನದ ಕೊಟ್ಟಿಗೆ ಅಥವಾ ಶೆಡ್ 5 ಫೀಟ್ ಎತ್ತರದ ಗೋಡೆಯನ್ನು ಹೊಂದಿರಬೇಕು.
• ಹಸುಗಳಿಗೆ ಮೇವು ಹಾಗೂ ನೀರಿನ ವ್ಯವಸ್ಥೆಗಾಗಿ ಗೋದಲಿಯನ್ನು ನಿರ್ಮಾಣ ಮಾಡಿರಬೇಕು.
• ಜಾನುವಾರುಗಳಿಗೆ ಶೆಡ್ ನಲ್ಲಿ ಗಾಳಿ ಮತ್ತು ಬೆಳಕು ಆಡಲು ಕೊಟ್ಟಿಗೆಗೆ ಶೆಡ್ ಶೀಟ್ಗಳನ್ನು ಹಾಕಬೇಕು.
•ಇವೆಲ್ಲವುದರ ಜೊತೆಗೆ ನೀವು ಈ ಯೋಜನೆಯಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನರೇಗಾ ನಾಮಫಲಕವನ್ನು ಕಡ್ಡಾಯವಾಗಿ ಹಾಕಬೇಕಾಗಿರುತ್ತದೆ.
• ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಿಕೊಳ್ಳಲು ರೈತರು ಮೊದಲನೆಯದಾಗಿ ತಮಗೆ ಸಂಬಂಧಪಟ್ಟ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ. ಅಂದರೆ ಈ ಯೋಜನೆಯಡಿಯಲ್ಲಿ ಯಾರ್ಯಾರು ಸಹಾಯ ಧನವನ್ನು ಪಡೆಯಬೇಕೆಂದು ಕೊಂಡಿದ್ದರೋ ಅಥವಾ ಈ ಯೋಜನೆಯ ಫಲಾನುಭವಿಯಾಗಲು ಬಯಸುವಂತಹ ಅರ್ಜಿದಾರರು ತಮ್ಮ ಹೆಸರನ್ನು ನಿಮಗೆ ಹತ್ತಿರವಿರುವ ಅಥವಾ ನಿಮಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಬೇಕಾಗಿರುತ್ತದೆ.
• ಪ್ರತಿವರ್ಷ ಜಾರಿಗೊಳಿಸುವ ಈ ಯೋಜನೆಯಲ್ಲಿ ನಿಮ್ಮ ಹೆಸರನ್ನು ಸೇರಿಸಬೇಕು. ಅಂದಾಗ ಮಾತ್ರ ನೀವು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
• ಇದಾದನಂತರ ಸಂಬಂಧಪಟ್ಟ ಪಂಚಾಯಿತಿಯ ಅಧಿಕಾರಿಗಳು ಬಂದು ನೀವು ದನದ ಕೊಟ್ಟಿಗೆ ಅಥವಾ ಶೆಡ್ಕಟ್ಟಬೇಕೆಂದು ಕೊಂಡಿರುವ ಖಾಲಿ ಜಾಗಕ್ಕೆ ಬಂದು ಭೇಟಿ ನೀಡಿ, ಆ ಜಾಗದ GPS ಅನ್ನು ಮಾಡಿ, ಆ ಜಾಗದ ಸರ್ವೆ ಮಾಡಿ ನಿಮಗೆ ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಅನುಮತಿಯನ್ನು ನೀಡುತ್ತಾರೆ.
• ಅದಾದ ನಂತರ ನೀವು ಕೊಟ್ಟಿಗೆ ಕಟ್ಟಲು ಬೇಕಾಗುವ ಸಾಮಗ್ರಿಗಳನ್ನು ಪಂಚಾಯಿತಿ ನೀಡುವ ಸಹಾಯಧನದಲ್ಲಿ ತಂದು ನಿಮ್ಮ ಕೊಟ್ಟಿಗೆ ಕಟ್ಟುವ ಕೆಲಸವನ್ನು ಪ್ರಾರಂಭಿಸಬಹುದು.
• ನೀವು ಕೊಟ್ಟಿಗೆ ಕಟ್ಟುವ ಕೆಲಸವನ್ನು ಶುರು ಮಾಡುವ ಮೊದಲು ಒಂದು ಕಲ್ಲಿನ ಬೋರ್ಡನ್ನು ಅಂದರೆ ನರೇಗಾ ನಾಮಫಲಕವನ್ನು ಬರೆಸಬೇಕಾಗಿರುತ್ತದೆ.
ಈ ಬೋರ್ಡ್ ನೀವು ಯಾವ ಯೋಜನೆಯಡಿ ಈ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದೀರಿ.ಎಂಬುದನ್
ಇದರಲ್ಲಿ ನೀವು ಯೋಜನೆ ಪಡೆಯುತ್ತಿರುವ ವರ್ಷ, ಗ್ರಾಮ ಪಂಚಾಯಿತಿ ಹೆಸರು, ತಾಲೂಕು ಮತ್ತು ಜಿಲ್ಲೆಯನ್ನು ಒಳಗೊಂಡಿರುತ್ತದೆ.
ಈ ನರೇಗಾ ನಾಮಫಲಕಾದಲ್ಲಿ ಫಲಾನುಭವಿಯ ಹೆಸರು ನಮೂದಿಸಲಾಗಿರುತ್ತದೆ.
ಹಾಗೂ ಅದೇ ರೀತಿ ಫಲಾನುಭವಿಯು ಈ ನರೇಗಾ ಉದ್ಯೋಗ ಖಾತರಿ ಯೋಜನೆಯನ್ನು ಪಡೆದುಕೊಳ್ಳುತ್ತಿರುವ ಕಾಮಗಾರಿ ಸಂಕೇತವನ್ನು ಒಳಗೊಂಡಿರುತ್ತದೆ.
ಈ ನರೇಗಾ ನಾಮಫಕದಲ್ಲಿ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಒಟ್ಟು ಬಿಡುಗಡೆಯಾದ ಮೊತ್ತ, ಎಷ್ಟು ಬಿಡುಗಡೆಯಾಗಿದೆ? ಯಾವುದಕ್ಕೆಲ್ಲ ಬಿಡುಗಡೆಯಾಗಿದೆ? ಖರ್ಚಾದ ಮೊತ್ತ ಮತ್ತು ಕೊಟ್ಟಿಗೆ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳ ಮೊತ್ತ, ಎಲ್ಲವನ್ನು ಒಳಗೊಂಡಿರುತ್ತದೆ.
ನರೇಗಾ ಯೋಜನೆಯ ಅಡಿಯಲ್ಲಿ ಸಹಾಯಧನ ಪಡೆದುಕೊಳ್ಳಲು ದನದ ಕೊಟ್ಟಿಗೆ ಹೇಗಿರಬೇಕು? ಅದರ ಉದ್ದ ಮತ್ತು ಅಳತೆಗಳು ಎಷ್ಟಿರಬೇಕು?
* ದನದ ಕೊಟ್ಟಿಗೆಯ ಅಗಲವು ಸುಮಾರು ನಾಲ್ಕು ಮೀಟರುಗಳಷ್ಟು ಇರಬೇಕು.
* ದನದ ಕೊಟ್ಟಿಗೆ ಅಥವಾ ಶೆಡ್ನ ಉದ್ದವು ಏಳು ಮೀಟರ್ಗಳಷ್ಟು ಇರಬೇಕು.
*ಅಂದರೆ ಸಾಮಾನ್ಯವಾಗಿ 22 ಅಡಿ ಉದ್ದ ಮತ್ತು13 ಅಡಿ ಅಗಲವನ್ನು ಹೊಂದಿರಬೇಕಾಗುತ್ತದೆ.
* ದನದ ಕೊಟ್ಟಿಗೆಯು ಕನಿಷ್ಠ ಅಗಲ ಮತ್ತು ಉದ್ದವಗಳನ್ನು ಹೊಂದಿರಬೇಕಾಗುತ್ತದೆ.
* ಇದಕ್ಕಿಂತ ಕಡಿಮೆ ಉದ್ದ ಮತ್ತು ಅಗಲಗಳ ಅಳತೆಗಳನ್ನು ಹೊಂದಿದ್ದರೆ ನಿಮಗೆ ಸಿಗುವ ಸಹಾಯಧನದಲ್ಲಿ ಮೊತ್ತವು ಕಡಿಮೆಯಾಗುತ್ತದೆ. ಅಂದರೆ ನಿಮಗೆ ಸಿಗುತ್ತಿರುವ ಸಾಮಗ್ರಿ ಮೊತ್ತದಲ್ಲಿ ಸಹಾಯಧನ ಕಡಿಮೆಯಾಗುತ್ತದೆ.
* ಇದಕ್ಕಿಂತ ಜಾಸ್ತಿ ಉದ್ದ ಮತ್ತು ಅಗಲಗಳನ್ನು ಹೊಂದಿರಬಹುದು. ಆದರೆ ಈ ಕನಿಷ್ಠ ಅಳತೆಗಳ ಕೆಳಗೆ ಅಳತೆಗಳನ್ನು ಹೊಂದಿರಬಾರದು.
* ದನದ ಕೊಟ್ಟಿಗೆ ನಿರ್ಮಾಣದ ಸಮಯದಲ್ಲಿ ದನಗಳನ್ನು ಕಟ್ಟುವ ಜಾಗದಲ್ಲಿ ನೆಲವನ್ನು ಕಾಂಕ್ರೀಟ್ ನಿಂದ ಮಾಡಿರಬೇಕಾಗಿರುತ್ತದೆ. ಯಾವುದೇ ತರದ ಚಪ್ಪಡಿ ಕಲ್ಲುಗಳನ್ನು ಮತ್ತು ಇನ್ನಿತರೆ ರಬ್ಬರ್ ಮ್ಯಾಟ್ ಅಥವಾ ನೆಲಹಾಸುಗಳನ್ನು ಬಳಸುವಂತಿಲ್ಲ. ನೀವು ನೆಲವನ್ನು ಕಾಂಕ್ರಿಟ್ ನಿಂದ ಮಾಡಿರದಿದ್ದರೆ ನಿಮಗೆ ಸಹಾಯಧನವನ್ನು ನೀಡಲು ಬರುವುದಿಲ್ಲ.
ಮೊದಲು ನೀವು ದನದ ಕೊಟ್ಟಿಗೆ ನಿರ್ಮಾಣ ಮಾಡಬೇಕೆಂದುಕೊಳ್ಳುವ ಖಾಲಿ ಜಾಗದಲ್ಲಿ ಫೋಟೋ ತೆಗೆಯಬೇಕು. ನಂತರ 40MM ಜೆಲ್ಲಿ ಕಲ್ಲು ಅಂದರೆ(ಕಡಿಗಳು) ಗಳನ್ನು ಹಾಕಿ ಸಮತಟ್ಟು ಮಾಡಬೇಕಾಗಿರುತ್ತದೆ. ಇದಾದ ನಂತರ ಅದರ ಮೇಲೆ ಕಾಂಕ್ರೆಟ್ ನಿಂದ ನೆಲವನ್ನು ಮುಚ್ಚಬೇಕಾಗುತ್ತದೆ.
* ದನಗಳ ಕೊಟ್ಟಿಗೆಯಲ್ಲಿ ಮೇವು ಅಥವಾ ನೀರಿನ ಸೌಲಭ್ಯಕ್ಕಾಗಿ ಗೋದಲಿಯನ್ನು ಇಟ್ಟಿಗೆಯನ್ನು ಬಳಸಿ ಕಟ್ಟಬೇಕು. ಕಟ್ಟಿದ ನಂತರ ಇಟ್ಟಿಗೆಗಳನ್ನು ಪ್ಲಾಸ್ಟರ್ ನಿಂದ ಮುಚ್ಚಬೇಕು.
* ಹಾಗೆಯೇ ದನಗಳನ್ನು ಗೋದಲಿಗೆ ಕಟ್ಟಲು ಕಬ್ಬಿಣದ ಬಳೆಗಳನ್ನು ಸಹ ಬಳಸಬಹುದು.
* ದನಗಳ ಮೂತ್ರ ಮತ್ತು ಕೊಟ್ಟಿಗೆ ತೊಳೆದ ನಂತರ ಅದರ ನೀರು ಸುಲಭವಾಗಿ ಹೋಗಲು ಒಂದು ಗುಂಡಿ ಅಥವಾ ಒಂದು ಚರಂಡಿ ವ್ಯವಸ್ಥೆಯನ್ನು ಮಾಡಬೇಕಾಗಿರುತ್ತದೆ. ಅಥವಾ ನಿಮಗೆ ಚರಂಡಿ ವ್ಯವಸ್ಥೆ ಇಲ್ಲದಿದ್ದಲ್ಲಿ ನೀರನ್ನು ಇಂಗು ಗುಂಡಿಗೆ ಬಿಡಬಹುದು.
* ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ದನದ ಕೊಟ್ಟಿಗೆಯ ಸುತ್ತಲೂ ಗೋಡೆಯನ್ನು ಕಟ್ಟಬೇಕಾಗುತ್ತದೆ.
* ಈ ಕೊಟ್ಟಿಗೆಯನ್ನ ನಿರ್ಮಾಣ ಮಾಡಲು ಸಾಮಾನ್ಯವಾಗಿ 22,000ರೂ.ಗಳ ಖರ್ಚು ಬರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಒಟ್ಟು ಸಹಾಯಧನ 43,000ರೂ.ಗಳು ಬರುತ್ತದೆ.
ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನ ಹೆಚ್ಚಳ ಮಾಡಿದ ನಂತರ ಒಟ್ಟು ಸಹಾಯಧನವಾಗಿ 57,000 ರೂ ಸಿಗುತ್ತದೆ. ಈ ಮೊತ್ತವನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೂ ಸಮವಾಗಿ ನೀಡಲಾಗುತ್ತದೆ. ಈ ಮೊತ್ತದಲ್ಲಿ ಅಂದರೆ ಒಟ್ಟಾರೆ 57,000ರೂ.ಗಳಲ್ಲಿ ಸರಿ ಸುಮಾರು 10,556ರೂ.ಗಳನ್ನು ಕೂಲಿ ಮೊತ್ತವಾಗಿ ಈ ಯೋಜನೆಯಡಿ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಸುಮಾರು 46,644ರೂ.ಗಳನ್ನು ಈ ಯೋಜನೆಯಡಿಯಲ್ಲಿ ದನದ ಕೊಟ್ಟಿಗೆ ಅಥವಾ ದನದಶೆಡ್ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಈ ಯೋಜನೆಯ ಅಡಿಯಲ್ಲಿ ಸಹಾಯಧನ ನೀಡಲಾಗುತ್ತದೆ.
ಫಲಾನುಭವಿಗಳು ಜಾನುವಾರು ಶೆಡ್ ಅಥವಾ ಕೊಟ್ಟಿಗೆಯನ್ನು ನಿರ್ಮಿಸಿಕೊಳ್ಳಲು,
#ಕನಿಷ್ಠ 4 ಜಾನುವಾರುಗಳನ್ನು ಹೊಂದಿರಬೇಕು.
#ಸಂಬಂಧಪಟ್ಟ ಪಶುವೈದ್ಯಾಧಿಕಾರಿಗಳಿಂದ ಜಾನುವಾರು ಇರುವ ಕುರಿತ ದೃಢೀಕರಣ ಪತ್ರವನ್ನು ಪಡೆಯಬೇಕು.
#ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಉದ್ಯೋಗ ಖಾತರಿ ಚೀಟಿ ಪುಸ್ತಕವನ್ನು ಹೊಂದಿರಬೇಕು.
#ಈ ಮೇಲಿನ ಉಲ್ಲೇಕಿಸಿದ ದಾಖಲಾತಿಗಳೊಂದಿಗೆ ಸ್ಥಳೀಯ ಗ್ರಾಮ ಪಂಚಾಯತಿಗೆ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
# ಗ್ರಾಮ ಪಂಚಾಯಿತಿಯವರ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಫಲಾನುಭವಿಯ ಹೆಸರು ಸೇರಿಸಿಕೊಂಡು ಮೇಲಾಧಿಕಾರಿಗಳಿಂದ ಅನುಮೋದನೆ ಪಡೆದ ನಂತರ ರೈತರು ಅವರ ದನದ ಕೊಟ್ಟಿಗೆಯ ಕಾಮಗಾರಿಯನ್ನು ಪ್ರಾರಂಭಿಸಬೇಕು.
# ಈ ಹಿಂದೆ ಉದ್ಯೋಗ ಖಾತರಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 43,000ರೂ.ಗಳ ಸಹಾಯಧನ ಹಾಗೂ ಸಾಮಾನ್ಯ ವರ್ಗದವರಿಗೆ 19,000 ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನೀಡಲಾಗುತ್ತಿತ್ತು.
ಈ ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚಿಸಿದ ಸಹಾಯಧನದ ಬಗ್ಗೆ ತಿಳಿಯಬೇಕೆಂದರೆ,
ಸಾಮಾನ್ಯ ವರ್ಗದವರಿಗೂ ಸಹ 57,000ರೂ.ಗಳ ಸಹಾಯಧನ ಈ ಯೋಜನೆ ಅಡಿಯಲ್ಲಿ ನೀಡಲಾಗುವುದು. ಸಾಮಾನ್ಯವಾಗಿ 4 ಕ್ಕಿಂತ ಹೆಚ್ಚು ಜಾನುವಾರು ಸಾಕಣೆ ಮಾಡುವವರು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.
ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಜಾನುವಾರು ಸೆಡ್ ನಿರ್ಮಾಣಕ್ಕೆ ಸಹಾಯಧನದ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ರಾಜ್ಯದಲ್ಲಿ ಈ ಯೋಜನೆಯ ಲಾಭವನ್ನು ಪಡೆದುಕೊಂಡು ಸಹಸ್ರಾರು ಕುಟುಂಬಗಳು ಶೆಡ್ ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡು ಜಾನುವಾರು ಸಾಕಣೆಯೊಂದಿಗೆ ಉತ್ತಮ ಆದಾಯ ಮಾಡಿಕೊಳ್ಳುತ್ತಿದ್ದಾರೆ.
ಇದೀಗ ದನದ ಶೆಡ್ ನಿರ್ಮಾಣ ಮಾಡಿಕೊಳ್ಳಲು ಸಹಾಯ ಧನ ಹೆಚ್ಚಿಸಿದೆ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಅಥವಾ ಸಂಬಂಧಪಟ್ಟ ಪಂಚಾಯಿತಿಯನ್ನು ಸಂಪರ್ಕಿಸಿರಿ.
]]>
ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ(poultry), ಕುರಿ(Sheep), ಮೇಕೆ(goat), ಹಂದಿ ಸಾಕಾಣಿಕೆ ಮತ್ತು ರಸಮೇವು(Silage) ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.
National livestock mission
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ
(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)
ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ (Kisan credit card)ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.
ಅವಶ್ಯಕ ದಾಖಲಾತಿಗಳು :-
1)ಆಧಾರ,
2)ಪಹಣಿ ಪತ್ರ
3)ಬ್ಯಾಂಕ್ಖಾತೆ ಸಂಖ್ಯೆ,
ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು
4)ಭಾವ ಚಿತ್ರ.
ಕ್ರ.ಸಂ |
ಘಟಕ |
ಸೌಲಭ್ಯಗಳ ವಿವರ |
|
ಹೈನುಗಾರಿಕೆ |
|
1 |
ಮಿಶ್ರತಳಿ ದನಗಳ ನಿರ್ವಹಣೆ (1+1) |
ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ |
|
ಆ. ಸುಧಾರಿತ ಎಮ್ಮೆಗಳ ನಿರ್ವಹಣೆ |
ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ |
|
ಕುರಿ ಸಾಕಾಣಿಕೆ |
|
2 |
ಕುರಿಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ |
|
ಕುರಿಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (10) |
ರೂ. 13,000 ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (20) |
ರೂ. 26,000 ರಂತೆ ಸಾಲ ಸೌಲಭ್ಯ |
|
ಮೇಕೆ ಸಾಕಾಣಿಕೆ |
|
3 |
ಮೇಕೆಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ |
|
ಮೇಕೆಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ |
4 |
ಹಂದಿ ಸಾಕಾಣಿಕೆ (10) |
ರೂ,60,000 ರಂತೆ ಸಾಲ ಸೌಲಭ್ಯ |
|
ಕೋಳಿ ಸಾಕಾಣಿಕೆ |
|
5 |
ಮಾಂಸದ ಕೋಳಿ ಸಾಕಾಣಿಕೆ |
2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ |
|
ಮೊಟ್ಟೆ ಕೋಳಿ ಸಾಕಾಣಿಕೆ |
1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ |
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.
Vetarnary department subsidy schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಹಾಲು ಉತ್ಪಾದಕರಿಗೆ ಪ್ರೋತ್ಸಾಹ(Milk incentive)
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ಲಸಿಕಾ ಕಾರ್ಯಕ್ರಮ(Vaccination program)
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ(Back yard poultry)
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>
ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ (FRUITS ID) ಪ್ರೊಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುದು.
ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.
ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು (FRUITS ID) ಪ್ರೊಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೊಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನುಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ (FRUITS ID) ಪ್ರೊಟ್ಸ್ ಐಡಿ ಸೃಜಿಸಿಕೊಳ್ಳಬಹುದು. (FRUITS ID) ಪ್ರೊಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.
ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್/Aadhaar number ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Aadhaar number/ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ Aadhaar number/ಆಧಾರ್ ಸಂಖ್ಯೆ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮ್ಮ ಆಧಾರ್ ನಂಬರ್ ನ ಕೊನೆಯ 4 ಸಂಖ್ಯೆ ಒಂದೆೇ ಇರುವ ಎಲ್ಲಾ ರೈತರ ಪಟ್ಟಿ ಸಿಗಲಿದೆ.ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಲು Search ಬಾಕ್ಸನಲ್ಲಿ ನಿಮ್ಮ ಹೆಸರು ಹಾಕಿ Search ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಬೆಳೆಹಾನಿ ಪರಿಹಾರ ಜಮಾ ಮಾಹಿತಿ ಸಿಗಲಿದೆ.
ಸ್ವಾವಲಂಬಿ ಸಾರಥಿ ಯೋಜನೆ
ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.
ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು
ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.
ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.
ಡ್ರೈವಿಂಗ್ ಲೈಸೆನ್ಸ್
ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.
ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಹಿಂದುಳಿದ ವರ್ಗದವರಾಗಿರಬೇಕು.
ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ
(DL) ಡ್ರೈವಿಂಗ್ ಲೈಸೆನ್ಸ್
ಫೋಟೋ
ಮೊಬೈಲ್ ನಂಬರ್
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಿ ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 10 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು.
75% ಸಬ್ಸಿಡಿಯಲ್ಲಿ ಸರಕು ವಾಹನ, ಕಾರು ಖರೀದಿಗೆ 4 ಲಕ್ಷ ರೂಪಾಯಿ ಸಹಾಯಧನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Car subsidy scheme
ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನ
ಉದ್ದೇಶಗಳು:
• ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಈ ಕೆಳಕಂಡ೦ತೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.
• ಬ್ಯಾಂಕ್ ಸಾಲದ ಶೇ.20ರಷ್ಟು ಸಹಾಯಧನ ಅಥವಾ ಗರಿಷ್ಠ ₹1 ಲಕ್ಷ
• ಘಟಕ ವೆಚ್ಚದ ಶೇ.70ರಷ್ಟು ಸಹಾಯಧನ ಅಥವಾ ಗರಿಷ್ಠ ₹2 ಲಕ್ಷ
ಸ್ವಾವಲಂಬಿ ಸಾರಥಿ
ಸರಕು ವಾಹನ / ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ. ಸಾಲದ ಮೊತ್ತದ ಶೇ.75ರಷ್ಟು ಸಹಾಯಧನ ಅಥವಾ ಗರಿಷ್ಠ 74 ಲಕ್ಷ
ಹಾವೇರಿ ಜಿಲ್ಲೆಯ ನಮ್ಮ ರೈತರಿಗೆ ಸಂತಸದ ಸುದ್ದಿ!
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ(Pradan mantri fasal bheema yojane) 2023-24ನೇ ಸಾಲಿನಲ್ಲಿ ಖಾಸಗಿ ವಿಮೆ ಸಂಸ್ಥೆಯವರು ಮುಂಗಾರು ಹಂಗಾಮಿನಲ್ಲಿ ಹಾವೇರಿ ಜಿಲ್ಲೆಯ ಬೆಳೆ ಕಟಾವು ಪ್ರಯೋಗಗಳ(Crop cutting experiment)ಸಂಬಂಧ ರಾಜ್ಯ ಸರ್ಕಾರದ ಸಮಿತಿಯ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರದ ತಾಂತ್ರಿಕ ಸಲಹಾ ಸಮಿತಿಗೆ ಮೇಲ್ಮನವಿ ಸಲ್ಲಿಸಿದ್ದರು.
ರಾಜ್ಯದಿಂದ ಪ್ರಬಲವಾದ ವಾದವನ್ನು ಮಂಡಿಸಿದ್ದ ಫಲಶ್ರುತಿಯಾಗಿ ಆಕ್ಷೇಪಣೆಗೊಳಗಾಗಿದ್ದ ಹಾವೇರಿ ಜಿಲ್ಲೆಯ ವಿಮಾ ಘಟಕಗಳಲ್ಲಿ ಸುಮಾರು 65000 ಅರ್ಹ ರೈತ ಫಲಾನುಭವಿಗಳಿಗೆ ರೂ. 45 ಕೋಟಿ ಬೆಳೆ ವಿಮಾ ಪರಿಹಾರ ಮೊತ್ತವನ್ನು ಅಂದಾಜಿಸಲಾಗಿದೆ. ಇದನ್ನು ಸದ್ಯದಲ್ಲೇ ಇತ್ಯರ್ಥಪಡಿಸಲಾಗುವುದು ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ತಿಳಿಸಿದ್ದಾರೆ.
.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಎರಡು ಲಕ್ಷದವರೆಗಿನ ಸಾಲ ಮನ್ನಾ(Bele sala manna) ಮಾಡಿ ಜಾರ್ಖಂಡ್ ಸರ್ಕಾರವು ರೈತರ ಮೊಗದಲ್ಲಿ ಸಂತಸ ಮೂಡುವಂತೆ ಮಾಡಿದೆ. ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು 1,76,977 ರೈತರ 400.66 ಕೋಟಿ ರೂ. ಕೃಷಿ ಸಾಲ ಮನ್ನಾ (Crop loan wavier)ಮಾಡಿದ್ದಾರೆ. ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾದ ಬೇಡಿಕೆಯನ್ನು ಈಡೇರಿಸುವ ಸಲುವಾಗಿ, ಜಾರ್ಖಂಡ್ನ ಹೇಮಂತ್ ಸೊರೆನ್ ಸರ್ಕಾರವು ತನ್ನ ಪ್ರಮುಖ ಭರವಸೆಗಳಲ್ಲಿ ಒಂದನ್ನು ಈಡೇರಿಸಿದೆ.
ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಯಾವ ರೈತರ ಎಷ್ಟು ಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ-Bele sala manna list 2024
2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಇದ್ದಾಗ ರಾಜ್ಯದ ರೈತರ ಸಾಲಮನ್ನಾ(Bele sala manna) ಮಾಡಿದ್ದರು.ಆದರೆ ಅದರಲ್ಲಿ ಕೇಲವು ರೈತರ ದಾಖಲೆಗಳ ಕೊರತೆಯಿಂದಾಗಿ ಬಾಕಿ ಉಳಿದ ಪ್ರಕರಣಗಳಲ್ಲಿ ದಾಖಲಾತಿಗಳನ್ನು ಸಲ್ಲಿಸಿದ ನಂತರ ಸಾಲಮನ್ನಾ (Sala manna)ಆಗುತ್ತಿದೆ.ಹಾಗಾದರೆ ಈ ಲೇಖನದಲ್ಲಿ ಯಾವೆಲ್ಲಾ ದಾಖಲಾತಿಗಳು ಬೇಕಾಗಬಹುದು ಎಂದು ಚೆಕ್ ಮಾಡಬಹುದು.
ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "Revenue department/ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು"(Revenue department services)ಮೇಲೆ ಕ್ಲಿಕ್ ಮಾಡಿ
ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ"(farmer) ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು"(Submit)ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ(Crop loan wavier) ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ(Bele sala manna list) ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ
ನಂತರ "CLWS ರೈತನ ಅರ್ಹತೆ" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್(bank) select ಮಾಡಿ,ಸಲ್ಲಿಸು/Submit ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ(crop loan wavier) ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಲೈವ್ ವಿಡಿಯೊ ನೋಡಿ
https://youtu.be/KtK4xqOzqFg?si=HlfARklUlpVFMj65
ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(Pradan mantri kisan samman nidhi yojana)ಯೋಜನೆಯನ್ನು 2019ರಲ್ಲಿ ಪ್ರಾರಂಭವಾಗಿದೆ.17ನೇ ಕಂತು ಜೂನ್ನಲ್ಲಿ ರಿಲೀಸ್ ಆಗಿತ್ತು. 16ನೇ ಕಂತು ಫೆಬ್ರವರಿಯಲ್ಲಿ ಬಿಡುಗಡೆಯಾಗಿತ್ತು.
3 ಕಂತುಗಳಲ್ಲಿ ಪಾವತಿ
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈಗ ಈ ವರ್ಷದ 2ನೇ ಕಂತು ಹಾಗೂ ಒಟ್ಟಾರೆಯಾಗಿ 18ನೇ ಕಂತು ಅಕ್ಟೋಬರ್ 5ರಂದು ಬಿಡುಗಡೆಯಾಗಲಿದೆ ಎಂದು ಪಿಎಂ ಕಿಸಾನ್ ಅಧಿಕೃತ ವೆಬ್ಸೈಟ್ (Pmkisan website)ನಲ್ಲಿ ಪ್ರಕಟಿಸಲಾಗಿದೆ.
ಹಾಗಾದರೆ ಯಾರಿಗೆಲ್ಲಾ ಸಿಗಲಿದೆ 18ನೇ (Pmkisan 18th instalment) ಕಂತು ಚೆಕ್ ಮಾಡಿಕೊಳ್ಳಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ (pmkisan 18th instalment eligible list)ದೊರೆಯಲಿದೆ
Pmkisan 18th instalment ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ (pmkisan ineleigible List)ದೊರೆಯಲಿದೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ (Mobile number)ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
ಹಾವೇರಿ ಜಿಲ್ಲೆಯ ನಮ್ಮ ರೈತರಿಗೆ ಸಂತಸದ ಸುದ್ದಿ!
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ(Pradan mantri fasal bheema yojane) 2023-24ನೇ ಸಾಲಿನಲ್ಲಿ ಖಾಸಗಿ ವಿಮೆ ಸಂಸ್ಥೆಯವರು ಮುಂಗಾರು ಹಂಗಾಮಿನಲ್ಲಿ ಹಾವೇರಿ ಜಿಲ್ಲೆಯ ಬೆಳೆ ಕಟಾವು ಪ್ರಯೋಗಗಳ(Crop cutting experiment)ಸಂಬಂಧ ರಾಜ್ಯ ಸರ್ಕಾರದ ಸಮಿತಿಯ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರದ ತಾಂತ್ರಿಕ ಸಲಹಾ ಸಮಿತಿಗೆ ಮೇಲ್ಮನವಿ ಸಲ್ಲಿಸಿದ್ದರು.
ರಾಜ್ಯದಿಂದ ಪ್ರಬಲವಾದ ವಾದವನ್ನು ಮಂಡಿಸಿದ್ದ ಫಲಶ್ರುತಿಯಾಗಿ ಆಕ್ಷೇಪಣೆಗೊಳಗಾಗಿದ್ದ ಹಾವೇರಿ ಜಿಲ್ಲೆಯ ವಿಮಾ ಘಟಕಗಳಲ್ಲಿ ಸುಮಾರು 65000 ಅರ್ಹ ರೈತ ಫಲಾನುಭವಿಗಳಿಗೆ ರೂ. 45 ಕೋಟಿ ಬೆಳೆ ವಿಮಾ ಪರಿಹಾರ ಮೊತ್ತವನ್ನು ಅಂದಾಜಿಸಲಾಗಿದೆ. ಇದನ್ನು ಸದ್ಯದಲ್ಲೇ ಇತ್ಯರ್ಥಪಡಿಸಲಾಗುವುದು ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ತಿಳಿಸಿದ್ದಾರೆ.
.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.
ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.
ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ
ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ/farmer" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು/Submit" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ(poultry), ಕುರಿ(Sheep), ಮೇಕೆ(goat), ಹಂದಿ ಸಾಕಾಣಿಕೆ ಮತ್ತು ರಸಮೇವು(Silage) ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.
National livestock mission
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ
(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)
ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ (Kisan credit card)ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.
ಅವಶ್ಯಕ ದಾಖಲಾತಿಗಳು :-
1)ಆಧಾರ,
2)ಪಹಣಿ ಪತ್ರ
3)ಬ್ಯಾಂಕ್ಖಾತೆ ಸಂಖ್ಯೆ,
ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು
4)ಭಾವ ಚಿತ್ರ.
ಕ್ರ.ಸಂ |
ಘಟಕ |
ಸೌಲಭ್ಯಗಳ ವಿವರ |
|
ಹೈನುಗಾರಿಕೆ |
|
1 |
ಮಿಶ್ರತಳಿ ದನಗಳ ನಿರ್ವಹಣೆ (1+1) |
ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ |
|
ಆ. ಸುಧಾರಿತ ಎಮ್ಮೆಗಳ ನಿರ್ವಹಣೆ |
ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ |
|
ಕುರಿ ಸಾಕಾಣಿಕೆ |
|
2 |
ಕುರಿಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ |
|
ಕುರಿಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (10) |
ರೂ. 13,000 ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (20) |
ರೂ. 26,000 ರಂತೆ ಸಾಲ ಸೌಲಭ್ಯ |
|
ಮೇಕೆ ಸಾಕಾಣಿಕೆ |
|
3 |
ಮೇಕೆಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ |
|
ಮೇಕೆಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ |
4 |
ಹಂದಿ ಸಾಕಾಣಿಕೆ (10) |
ರೂ,60,000 ರಂತೆ ಸಾಲ ಸೌಲಭ್ಯ |
|
ಕೋಳಿ ಸಾಕಾಣಿಕೆ |
|
5 |
ಮಾಂಸದ ಕೋಳಿ ಸಾಕಾಣಿಕೆ |
2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ |
|
ಮೊಟ್ಟೆ ಕೋಳಿ ಸಾಕಾಣಿಕೆ |
1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ |
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.
Vetarnary department subsidy schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಹಾಲು ಉತ್ಪಾದಕರಿಗೆ ಪ್ರೋತ್ಸಾಹ(Milk incentive)
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ಲಸಿಕಾ ಕಾರ್ಯಕ್ರಮ(Vaccination program)
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ(Back yard poultry)
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>ಶುಂಠಿ ಬೆಳೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಬೆಳೆವಿಮೆ ಹಣ ಜಮಾ(Belevime hana jama)ಮಾಡಲಾಗುತ್ತಿದ್ದು,ಕಳೆದ ಎರಡು ದಿನಗಳಿಂದ ಎಕರೆಗೆ 37,300 ರೂಪಾಯಿಯಂತೆ ರೈತರ ಖಾತೆಗೆ ಜಮಾ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ರಾಷ್ಟ್ರೀಯ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ (National Horticulture mission)ಯೋಜನೆಯಡಿ ವಿವಿಧ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM);
ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(Pradna mantri krishi sinchayi yojane);
ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್ರವರೆಗೆ ಶೇಕಡಾ 90%) ಸಹಾಯಧನ.ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ(Farm pond), ಕೃಷಿಹೊಂಡ, ಪ್ಯಾಕ್ಹೌಸ್(Pack house), ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) (Fiber doti)ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್ (Aadhaar card) ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ
https://horticulturedir.karnataka.gov.in/info-2/Facilities+available+to+farmers/kn
ವಿವಿಧ ಯೋಜನೆಗಳು:
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ:(MGNAREGA)
ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೋಟಾ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ(farm pond), ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:(NHM)
ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ(farm pond), ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಯಾಕ್ಹೌಸ್(pack house) ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ:(Pradan mantri Krishi sinchayi yojane)
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ (Drip irrigation) ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.75 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.
ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ:
ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಮತ್ತು ಬೈಯೋಡೈಜಿಸ್ಟರ್ ಮತ್ತು ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಸಹ ಅರ್ಜಿ ಆಹ್ವಾನಿಸಲಾಗಿದೆ.
ಮೇಲ್ಕಂಡ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಲಾಗಿದೆ. ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.
]]>ಮಳೆಯ ಕಾರಣಕ್ಕೆ ರಾಜ್ಯಾದ್ಯಂತ 80,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶ(crop loss)ವಾಗಿದ್ದು, ವಾರದೊಳಗಾಗಿ ಎಲ್ಲಾ ರೈತರಿಗೂ ಪರಿಹಾರ(parihara) ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.
ಈ ಬಗ್ಗೆ ಮಾತನಾಡಿದ ಅವರು, "ರಾಜ್ಯಾದ್ಯಂತ ಕೃಷಿ ಬೆಳೆ 78679 ಹೆಕ್ಟೇರ್ ಹಾನಿ(bele hani)ಯಾಗಿದ್ದರೆ, ತೋಟಗಾರಿಕಾ ಬೆಳೆ 2294 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ.
ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿವೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು. ಪ್ರಸ್ತುತ ರಾಜ್ಯ ಸರ್ಕಾರದ ಬಳೆ ಇರುವ ಸಂಪನ್ಮೂಲದಲ್ಲೇ ಪರಿಹಾರ ನೀಡಲಾಗುವುದು. ಇನ್ನೂ ಒಂದೂವರೆ ತಿಂಗಳ ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆಹಾನಿ(croploss)ಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು ತದನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು' ಎಂದು ತಿಳಿಸಿದರು.
ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಆಧಾರ್ ಲಿಂಕ್ ಆಗದ ರೈತರ ಕೋಟಿಗಟ್ಟಲೆ ಬೆಳೆ ವಿಮೆ(Crop insurance) ಹಣ ಬ್ಯಾಂಕ್ ಖಾತೆಗಳಲ್ಲಿ ಬಾಕಿ ಉಳಿದಿದ್ದು,ಆಧಾರ್ ಲಿಂಕ್ ಮಾಡಿಸಿದರೆ ಸಂಬಂಧಪಟ್ಟ ರೈತರ ಖಾತೆಗೆ ಜಮಾ ಆಗಲಿದೆ.(ಉದಾಹರಣೆಗೆ ಹಾವೇರಿ ಜಿಲ್ಲೆಯೊಂದರಲ್ಲೆ 2019 ರಿಂದ ಇಲ್ಲಿಯವರೆಗೂ 2 ಕೋಟಿ 36 ಲಕ್ಷ ಬೆಳೆವಿಮೆ ಹಣ ಬ್ಯಾಂಕ್ ಖಾತೆಗಳಲ್ಲಿ ಕೊಳೆಯುತ್ತಿದೆ.ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೋಟ್ಯಾಂತರ ಬೆಳೆವಿಮೆ ಹಣ ಬ್ಯಾಂಕಗಳಲ್ಲಿ ಬಾಕಿ ಉಳಿದಿದೆ)
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ (FRUITS ID) ಪ್ರೊಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ(Bele parihara) ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುದು.
ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.
ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು (FRUITS ID) ಪ್ರೊಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೊಟ್ಸ್ ಐಡಿ(FID NUMBER) ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನುಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ (FRUITS ID) ಪ್ರೊಟ್ಸ್ ಐಡಿ(FID) ಸೃಜಿಸಿಕೊಳ್ಳಬಹುದು. (FRUITS ID) ಪ್ರೊಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.
ಮೊದಲು ನಿಮ್ಮ FID number ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಯೋಜನೆಗಳ ಪಟ್ಟಿ ದೊರೆಯಲಿದೆ, ಅದರಲ್ಲಿ ನಿಮಗೆ ಬೇಕಾದ ಯೋಜನೆಯ ಮೇಲೆ ಕ್ಲಿಕ್ ಮಾಡಿ
ಉದಾಹರಣೆಗೆ ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿ(Gruhalakahmi)
ಈ ಕೆಳಗಿನಂತೆ ಇಲ್ಲಿಯವರೆಗೂ ಹಣ ಜಮಾ ಆಗಿರುವ ಮಾಹಿತಿ ತೋರಿಸುತ್ತದೆ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Survey number/ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,ಸರ್ವೆ ನಂಬರ್,ಸರ್ ನಾಕ್,ಹಿಸ್ಸಾ ನಂಬರ್ select ಮಾಡಿ Get data/ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ.
ಶುಂಠಿ ಬೆಳೆ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಬೆಳೆವಿಮೆ ಹಣ ಜಮಾ ಮಾಡಲಾಗುತ್ತಿದ್ದು,ಕಳೆದ ಎರಡು ದಿನಗಳಿಂದ ಎಕರೆಗೆ 37,300 ರೂಪಾಯಿಯಂತೆ ರೈತರ ಖಾತೆಗೆ ಜಮಾ ಆಗುತ್ತಿದೆ.
ಹಾಗಾಗರೆ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ಫ್ರುಟ್ಸ್ ನಲ್ಲಿ(FRUITS) ನೊಂದಣಿ ಮಾಡಿಕೊಳ್ಳದೇ ಇರುವ ರೈತರು ಕೂಡಲೆ ಫ್ರುಟ್ಸ್ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೆ ಫ್ರುಟ್ಸ್ನಲ್ಲಿ ನೊಂದಣಿ ಮಾಡಿಸಿಕೊಂಡವರು ಎಲ್ಲಾ ಸರ್ವೆ ನಂಬರ್(Survey number) ಗಳನ್ನು ನಿಮ್ಮ FIDಗೆ ಲಿಂಕ್ ಮಾಡಬೇಕು, ಅಂದರೆ ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 01 ಎಕರೆ ಮಾತ್ರ ನಮೂದಿಸಿರುತ್ತಾರೆ, ಅಂತಹವರಿಗೆ ಕೇವಲ 01 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ, ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ಪಹಣಿಯ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ (FRUITS) ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ(bele parihara) ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ ಪಾವತಿಯಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ (FRUITS)ನಲ್ಲಿ ನೊಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ನಿಮ್ಮ FID ಗೆ ಎಷ್ಟು ಸರ್ವೆ ನಂಬರ್ ಲಿಂಕ್ ಆಗಿದೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್(Aadhaar number) ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ password create ಮಾಡಿ
Mobile number,Create ಮಾಡಿದ password ಹಾಗೂ captcha code ಹಾಕಿ ಲಾಗಿನ್ ಮಾಡಿ
ನಂತರ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, Search ಮೇಲೆ ಕ್ಲಿಕ್ ಮಾಡಿ
ನಂತರ Registration status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ FIDಗೆ ಯಾವ ಯಾವ ಸರ್ವೆ ನಂಬರ್(Survey number) ಗಳನ್ನು ಸೇರಿಸಲಾಗಿದೆ ಎಂದು ತೋರಿಸುತ್ತದೆ
ನಿಮ್ಮ ಸರ್ವೆ ನಂಬರ್(Survey number) ಗಳು ನಿಮ್ಮ FIDಯಲ್ಲಿ ಸೇರಿಸದಿದ್ದರೆ,ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಬೇಟಿ ಕೊಟ್ಟು ನಿಮ್ಮ ಎಲ್ಲಾ ಸರ್ವೆ ನಂಬರ್ ಗಳನ್ನು ಸೇರಿಸಿಕೊಳ್ಳಿ.
ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (GKVK) ವತಿಯಿಂದ ನವೆಂಬರ್ ತಿಂಗಳಲ್ಲಿ ಪ್ರಸಕ್ತ ಸಾಳಿನ 'ಬೃಹತ್ ಕೃಷಿ ಮೇಳ 2024' (Gkvk krishimela 2024)ಆಯೋಜನೆ ಮಾಡಿದೆ. ಇದರಲ್ಲಿ ರೈತರಿಗೆ ಆದಾಯ ಹೆಚ್ಚಿಸುವ ಹೊಸ ಹೊಸ ಬೀಜ ತಳಿ ಬಿಡುಗಡೆ ಆಗಲಿವೆ. ಕೃಷಿ ತಾಂತ್ರಿಕ ಸಲಕರಣೆಗಳು ಪರಿಚಯಗೊಳ್ಳಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಳ ಉದ್ಘಾಟಿಸುವ ಸಾಧ್ಯತೆ ಇದೆ.
ಬೆಂಗಳೂರಿನ(Bangalore krishimela) ಯಲಹಂಕದಲ್ಲಿ ನಡೆಯಲಿರುವ ಗಾಂಧಿ ಕೃಷಿವಿಜ್ಞಾನ ಕೇಂದ್ರದ (GKVK) ಆವರಣದಲ್ಲಿ ನವೆಂಬರ್ 14 ರಿಂದ 17ರವರೆಗೆ ಮೂರು ದಿನ ರೈತರ ಜಾತ್ರೆ ರೀತಿಯಲ್ಲಿ ಈ ಕೃಷಿ ಮೇಳ ನಡೆಯುತ್ತದೆ. ಈ ಭಾರಿ 'ಹವಾಮಾನ ಚತುರ ಡಿಜಿಟಲ್ ಕೃಷಿ' ಎಂಬ ಘೋಷವಾಕ್ಯದೊಂದಿಗೆ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜಿಕೆವಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನೂ ಈ ಮೇಳದಲ್ಲಿ ವಿಶೇಷವಾಗಿ ಅಧಿಕ ಇಳುವರಿ ಕೊಡುವ ನಾಲ್ಕು ಮೆಕ್ಕೆಜೋಳ ತಳಿಗಳನ್ನು ಬಿಡುಗಡೆ ಮಾಡಲಾಗುತ್ತದೆ. ಇದರೊಂದಿಗೆ ಅಲಸಂಧಿ, ಜೋಳ, ಸೋರ್ಯಕಾಂತಿ ಹೊಸ ತಳಿಗಳು ಲೋಕಾರ್ಪಣೆಗೊಳ್ಳಲಿವೆ. ಅಲ್ಲದೇ ಕಳೆದ ನಿರ್ಮೂಲನೆ, ಕೀಟ ಹತೋಟಿಗೆ ಇಟ್ಟುಕೊಳ್ಳಬಹುದಾದ ತಾಂತ್ರಿಕತೆಗಳು ರೈತರಿಗೆ ಪರಿಚಿತಗೊಳ್ಳಲಿವೆ. ಅಗತ್ಯ ಸಲಹೆ ಸೂಚನೆಗಳು ರೈತರಿಗೆ ಈ ಮೇಳದಿಂದ ಸಿಗಲಿವೆ.
ಇನ್ನೂ ಒಂದೇ ಹೆಕ್ಟೇರ್ಗೆ 80 ದಿನಗಳಲ್ಲಿ 24 ಕ್ವಿಂಟಾಲ್ ನಷ್ಟು ಇಳುವರಿ ನೀಡುವ ಕೆಬಿಎಸ್ಎಚ್ 90 ಸೂರ್ಯಕಾಂತಿ ತಳಿಯನ್ನು ಕೃಷಿ ವಿಜ್ಞಾನ ಕೇಂದ್ರ ಅಭಿವೃದ್ಧಿ ಪಡಿಸಿದೆ. ಅಧಿಕ ಇಳುವರಿ ಜೊತೆಗೆ ಉತ್ತಮ ಗುಣಮಟ್ಟದ್ದಾಗುವ ಕಾರಣ ಅಧಿಕ ತೈಲ ಅಂಶ ಈ ಸೂರ್ಯ ಕಾಂತಿಯಲ್ಲಿ ಇರಲಿದೆ.
ಮುಸುಕಿನ ಜೋಳದಲ್ಲಿ ಎಂಎಎಚ್ 15ರಿಂದ 84 ಎಂಬ ಮಧ್ಯಮಾವಧಿಯ ತಳಿಯನ್ನು ವಿಶ್ವವಿದ್ಯಾಲಯ ಕಂಡು ಹಿಡಿದಿದೆ. ಈ ಮೆಕ್ಕೆಜೋಳದ ತಳಿಯು ಹೆಕ್ಟೆರ್ಗೆ 92ರಿಂದ 95ಕ್ವಿಂಟಾಲ್ ಇಳುವರಿ ನೀಡುವ ಸಾಮರ್ಥ್ಯ ಹೊಂದಿವೆ. ಈ ನೂತನ ತಳಿಗಳು ರೈತರ ಆದಾಯ ಹೆಚ್ಚಿಸಲಿವೆ ಎಂಬ ವಿಶ್ವಾಸ ವಿಶ್ವವಿದ್ಯಾಲಯ ಹೊಂದಿದೆ.
ಸುಧಾರಿತ ಬೇಸಾಯ ವ್ಯವಸ್ಥೆಗೆ ಆದ್ಯತೆ
ವಿಶ್ವವಿದ್ಯಾಲಯವು ಸುಧಾರಿತ ಕೃಷಿ ವ್ಯವಸ್ಥೆ ಆದ್ಯತೆ ನೀಡುತ್ತಿದೆ. ಹೊಸ ಹೊಸ ತಂತ್ರಜ್ಞಾನಗಳ ಆವಿಷ್ಕಾರ ಮಾಡಿ ರೈತರಿಗೆ ಪರಿಚಯ ಮಾಡುತ್ತಿದೆ. 19 ಹೊಸ ತಾಂತ್ರಿಕತೆಗಳನ್ನು ವಿವಿ ಶೋಧಿಸಿದೆ. ಕೈ ಚಾಲಿತ ರಾಗಿ, ಗೊಬ್ಬರದ ಕೂರಿಗೆ ಸಂಶೋಧಿಸಿದೆ. ಇದರಿಂದ 1.5 ಎಕರೆ ಭೂಮಿಯನ್ನು ಇಬ್ಬರೇ ಬಿತ್ತನೆ ಮಾಡಬಹುದು.
ಅದೇ ರೀತಿ ಶೇಂಗಾವನ್ನು ಗಿಡದಿಂದ ಬೇರ್ಪಡಿಸುವ ಯಂತ್ರವನ್ನು ಆವಿಷ್ಕರಿಸಿದೆ. ಶೇಂಗಾ ಜೊತೆಗೆ ಸೂರ್ಯಕಾಂತಿ, ಮೆಕ್ಕಜೋಳ ಬೀಜಗಳನ್ನು ಬೇರ್ಪಡಿಸಲು ಈ ಯಂತ್ರಗಳನ್ನು ಬಳಸಬಹುದು. ಇದರೊಂದಿಗೆ ಅನೇಕ ಹಸು, ಹೋರಿ ತಳಿಗಳನ್ನು ಖರೀದಿಸಬಹುದು. ಹೈನುಗಾರಿಕೆ, ತೋಟಗಾರಿಕೆಗೆ, ಇನ್ನಿತರ ವಾಣಿಜ್ಯ ಬೆಳೆಗಳಿಗೆ ಉಪಯುಕ್ತ ಸಲಹೆಗಳು ಇಲ್ಲಿ ನೀಡಲಾಗುತ್ತಿದೆ.
ಇನ್ನೂ ಕೃಷಿ ವಲಯದಲ್ಲಿ ಅಸಾಧಾರಣ ಸಾಧನೆ ಮಾಡಿದವರನ್ನು ವಿಶ್ವವಿದ್ಯಾಲಯ ಇದೇ ವೇಳೆ ಸನ್ಮಾನಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
]]>
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
ಕರ್ನಾಟಕ ಲೋಕಸೇವಾ ಆಯೋಗವು(KPSC) ಇದೀಗ ಮತ್ತೊಂದು ಹೊಸ ಅಧಿಸೂಚನೆ ಪ್ರಕಟಿಸಿದೆ. ಅದು ಸಹ ಕೃಷಿ ಇಲಾಖೆಯ(Agriculture department) ಹುದ್ದೆಗಳಿಗೆ. ಗ್ರೂಪ್ ಬಿ ವೃಂದದ ಹುದ್ದೆಗಳು ಇವಾಗಿದ್ದು, ಅರ್ಜಿ ಸಲ್ಲಿಸಲು ಸಹ ವಯಸ್ಸಿನ ಅರ್ಹತೆ ವಿಷಯದಲ್ಲಿ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಖುಷಿ ಪಡುವ ವಿಚಾರವಿದೆ. ಈ ಹುದ್ದೆಗಳ ಕುರಿತು ಕಂಪ್ಲೀಟ್ ಡೀಟೇಲ್ಸ್ ಅನ್ನು ಈ ಕೆಳಗಿನಂತೆ ನೀಡಲಾಗಿದೆ ನೋಡಿ. ಅರ್ಜಿ ಸಲ್ಲಿಸಲು ನವೆಂಬರ್ 07 ಕೊನೆ ದಿನವಾಗಿದೆ.
ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಳೆದ ಏಪ್ರಿಲ್, ಮೇ ಹಾಗೂ ಜೂನ್ ತಿಂಗಳ ನಡುವೆ ಹಲವು ಇಲಾಖೆಗಳು ಹಲವು ವೃಂದದ ಹುದ್ದೆಗಳ ಭರ್ತಿಗೆ ನೇಮಕ ಪ್ರಸ್ತಾವನೆ ನೀಡಿದ್ದವು. ಅವುಗಳ ಪೈಕಿ ಕೃಷಿ ಇಲಾಖೆಯ ಕೃಷಿ ಅಧಿಕಾರಿಗಳು(Agriculture officer), ಸಹಾಯಕ ಕೃಷಿ ಅಧಿಕಾರಿ(Assistant Agriculture officer) ಹುದ್ದೆಗಳ ಭರ್ತಿಗೆ ಸಹ ಪ್ರಸ್ತಾವನೆ ಬಿಡುಗಡೆ ಮಾಡಲಾಗಿದೆ ಎಂಬುದನ್ನು ತಿಳಿಸಿದ್ದೆವು. ಇದೀಗ ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧ ಅಧಿಕೃತವಾಗಿ ಕೆಪಿಎಸ್ಸಿ ನೇಮಕ ನೋಟಿಫಿಕೇಶನ್ ಬಿಡುಗಡೆ ಮಾಡಿದೆ.
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 128 ಕೃಷಿ ಅಧಿಕಾರಿ ಹುದ್ದೆಗೆ ಹಾಗೂ 817 ಸಹಾಯಕ ಕೃಷಿ ಅಧಿಕಾರಿ ಸೇರಿ ಒಟ್ಟು 945 ಹುದ್ದೆ ಭರ್ತಿಗೆ ಅಧಿಸೂಚನೆ ಹೊರಬಿದ್ದಿದ್ದು, ಈ ಹುದ್ದೆಗಳಿಗೆ ಈಗ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಅಧಿಕಾರಿಗಳು | 86 RPC + 42HK :128 ಒಟ್ಟು |
ಸಹಾಯಕ ಕೃಷಿ ಅಧಿಕಾರಿಗಳು | 586 RPC + 231 HK : 817 ಒಟ್ಟು |
ಕೃಷಿ ಇಲಾಖೆಯಲ್ಲಿ ಭರ್ತಿ ಮಾಡುವ ಒಟ್ಟು ಹುದ್ದೆಗಳ ಸಂಖ್ಯೆ | 945 |
ಅಧಿಸೂಚನೆ ಬಿಡುಗಡೆ ಆದ ದಿನಾಂಕ | 20-09-2024 |
ಆನ್ಲೈನ್ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ | 07-10-2024 |
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ | 07-11-2024 |
ಶೇಕಡ.85 ರಷ್ಟು ಹುದ್ದೆಗಳಿಗೆ - ಬಿಎಸ್ಸಿ (ಕೃಷಿ) ಅಥವಾ ಬಿಎಸ್ಸಿ (ಆನರ್ಸ್) ಕೃಷಿ
ಶೇಕಡ.15 ರಷ್ಟು ಹುದ್ದೆಗಳಿಗೆ ಕೆಳಗಿನ ವಿದ್ಯಾರ್ಹತೆ ಪರಿಗಣಿಸಲಾಗುವುದು.
ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ : Rs.43,100-83,900 |
ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ವೇತನ ಶ್ರೇಣಿ :Rs.40,900- 78,200 |
ಕೃಷಿ ಇಲಾಖೆ ಹುದ್ದೆಗಳಿಗೆ ವರ್ಗಾವಾರು ನಿಗದಿತ ಕನಿಷ್ಠ, ಗರಿಷ್ಠ ವಯಸ್ಸಿನ ಅರ್ಹತೆಗಳು
ಅರ್ಜಿ ಸಲ್ಲಿಸಲು ಕನಿಷ್ಠ-18 ವರ್ಷಗಳು.
ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯವರಿಗೆ ಗರಿಷ್ಠ 38 ವರ್ಷಗಳು.
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅರ್ಹತೆಯವರಿಗೆ ಗರಿಷ್ಠ 41 ವರ್ಷಗಳು.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- ಅರ್ಹತೆಯವರಿಗೆ ಗರಿಷ್ಠ 43 ವರ್ಷಗಳು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ
ನೋಟಿಫಿಕೇಶನ್ ಹಾಗೂ ಇತರೆ ಹೆಚ್ಚಿನ ಮಾಹಿತಿಗಳಿಗಾಗಿ https://www.kpsc.kar.nic.in/notification.html ವೆಬ್ಸೈಟ್ಗೆ ಭೇಟಿ ನೀಡಿರಿ.
ನೇಮಕಾತಿ ವಿಧಾನ
ಈ ಹುದ್ದೆಗಳಿಗೆ ನೇಮಕಾತಿ ವಿಧಾನದಲ್ಲಿ ಕೆಳಗಿನ ಪರೀಕ್ಷೆಗಳನ್ನು ನಡೆಸಲಾಗುತ್ತದೆ.
ಕನ್ನಡ ಭಾಷಾ ಪರೀಕ್ಷೆ - 150 ಅಂಕಗಳಿಗೆ
ಸಾಮಾನ್ಯ ಪತ್ರಿಕೆ : 300 ಅಂಕಗಳಿಗೆ 01-30 ಗಂಟೆ.
ನಿರ್ದಿಷ್ಟ ಪತ್ರಿಕೆ : 300 ಅಂಕಗಳಿಗೆ 2 ಗಂಟೆ.
ಹುದ್ದೆಯ ಹೆಸರು | ಕೃಷಿ ಅಧಿಕಾರಿ / ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳು. |
ವಿವರ | ಕೃಷಿ ಇಲಾಖೆ ಹುದ್ದೆಗಳಿಗೆ ಕೆಪಿಎಸ್ಸಿ ಅಧಿಸೂಚನೆ |
ಪ್ರಕಟಣೆ ದಿನಾಂಕ | 2024-09-20 |
ಕೊನೆ ದಿನಾಂಕ | 2024-11-07 |
ಉದ್ಯೋಗ ವಿಧ | ಪೂರ್ಣಾವಧಿ |
ಉದ್ಯೋಗ ಕ್ಷೇತ್ರ | ಕೃಷಿ ಇಲಾಖೆ ಸರ್ಕಾರಿ ಹುದ್ದೆಗಳು |
ವೇತನ ವಿವರ | INR 43100 to 83900 /Month |
ಕೌಶಲ | -- |
ವಿದ್ಯಾರ್ಹತೆ | ಕೃಷಿ ಹಾಗೂ ಇತರೆ ಕೃಷಿ ಮತ್ತು ಆಹಾರ ಸಂಬಂಧಿತ ಇಂಜಿನಿಯರಿಂಗ್ ಪದವಿ |
ಕಾರ್ಯಾನುಭವ | 0 Years |
ಸಂಸ್ಥೆಯ ಹೆಸರು | ಕರ್ನಾಟಕ ಲೋಕಸೇವಾ ಆಯೋಗ |
ವೆಬ್ಸೈಟ್ ವಿಳಾಸ | https://www.kpsc.kar.nic.in/index.html |
ಧಾರವಾಡ ಕೃಷಿ ವಿಶ್ವವಿದ್ಯಾಲಯದ(University of agricultural sciences Dharwad) ಆವರಣದಲ್ಲಿ ಹವಾಮಾನ ವೈಪರೀತ್ಯ ನಿವ೯ಹಣೆಗೆ ಕೃಷಿ ತಾಂತ್ರಿಕತೆಗಳು ಎಂಬ ಶೀರ್ಷಿಕೆಯಡಿಯಲ್ಲಿ ಸೆಪ್ಟೆಂಬರ್ 21 ರಿಂದ 24 ರವರೆಗೆ ಕೃಷಿ ಮೇಳವನ್ನು(Krushimela) ಆಯೋಜಿಸಲಾಗಿದೆ. ಈ ಬಾರಿ ಕೃಷಿ ಮೇಳದ ಮೂಲಕ ಅಲ್ಪ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರಿಗೆ ಕೃಷಿ ತಂತ್ರಜ್ಞಾನಗಳನ್ನು ತಲುಪಿಸುವುದು ಮುಖ್ಯ ಉದ್ದೇಶವಾಗಿದ್ದು, ಮೇಳದಲ್ಲಿ ಸುಮಾರು 14-16 ಲಕ್ಷ ರೈತರು ಭಾಗವಹಿಸುವ ನಿರೀಕ್ಷೆಯಿದೆ. ಮೊದಲಬಾರಿಗೆ ಕ್ಯೂಆರ್ ಕೋಡ್ ಮೂಲಕ ನೋಂದಣಿ ಮಾಡುವ ವ್ಯವಸ್ಥೆಯನ್ನು ಈ ಕೃಷಿ ಮೇಳದಲ್ಲಿ ಕಲ್ಪಿಸಲಾಗಿದೆ.
ಮೇಳದಲ್ಲಿ ಪ್ರಾಯೋಗಿಕ ತಾಕುಗಳ ವೀಕ್ಷಣೆ, ತಜ್ಞರಿಂದ ಕೃಷಿ ಸಮಸ್ಯೆಗಳ ಕುರಿತು ವಿಚಾರ ವಿನಿಮಯ, ಕೃಷಿ ಮತ್ತು ವಸ್ತು ಪ್ರದರ್ಶನ, ಫಲ-ಪುಷ್ಪ ಪ್ರದರ್ಶನ(Flower fruits exhibition), ಗಡ್ಡೆ ಗೆಣಸು ಪ್ರದರ್ಶನ, ವಿಸ್ಮಯಕಾರಿ ಕೀಟ / ಪ್ರಪಂಚ(Insect exhibition), ಸಾವಯವ ಕೃಷಿ ವಸ್ತು ಪ್ರದರ್ಶನ(Organic farming), ಕೃಷಿ ಪರಿಕರಗಳ ಮಾರಾಟ(Agriculture input exhibition), ಕೃಷಿ ಪ್ರಕಟಣೆಗಳ ಮಾರಾಟ ಇತ್ಯಾದಿ ಇರುತ್ತದೆ. ಕೃಷಿಮೇಳದಲ್ಲಿ ವಸ್ತು ಪ್ರದರ್ಶನದ ಮಳಿಗೆಗಳು -- ಕೃಷಿ ವಸ್ತು ಪ್ರದರ್ಶನದಲ್ಲಿ 150 ಹೈಟೆಕ್ ಮಳಿಗೆಗಳು, 214 ಸಾಮಾನ್ಯ ಮಳಿಗೆಗಳು, 110 ಯಂತ್ರೋಪಕರಣ ಮಳಿಗೆಗಳು, 27 ಟ್ರ್ಯಾಕ್ಟರ್ ಇತ್ಯಾದಿ ಭಾರಿ ಯಂತ್ರೋಪಕರಣಗಳ ಮಳಿಗೆಗಳು, ಹಾಗೂ 28 ಆಹಾರ ಮಳಿಗೆಗಳು ಈಗಾಗಲೇ ಬುಕ್ ಆಗಿವೆ.
ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಕೈಗೊಳ್ಳಬೇಕಾದ ಬೆಳೆ ಪದ್ಧತಿಗಳು ಹಾಗೂ ಕೃಷಿ ತಾಂತ್ರಿಕತೆಗಳು, ಸಮಗ್ರ ಬೆಳೆ ನಿರ್ವಹಣೆ, ಜೈವಿಕ ಗೊಬ್ಬರ ಹಾಗೂ ಪೀಡೆನಾಶಕಗಳು ಎಣ್ಣೆಕಾಳು, ದ್ವಿದಳ ಧಾನ್ಯಗಳು ಮತ್ತು ಹಿಂಗಾರು ಬೆಳೆಗಳ ತಾಂತ್ರಿಕತೆಗಳು, ಮಳೆ ನೀರು ಕೊಯ್ದು ಮತ್ತು ಅಂತರ್ಜಲ ಮರುಪೂರಣ
ನೈಸರ್ಗಿಕ ಕೃಷಿ, ಸಾವಯವ ಕೃಷಿ ಮತ್ತು ಮಣ್ಣಿನ ಫಲವತ್ತತೆ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಗುತ್ತದೆ.
ಹೈಟೆಕ್ ತೋಟಗಾರಿಕೆ. ಹಣ್ಣು-ಹೂವಿನ ಪ್ರದರ್ಶನ ಮತ್ತು ಕೀಟ ಪ್ರಪಂಚ, ಸುಧಾರಿತ ಕೃಷಿ ಯಂತ್ರೋಪಕರಣ ಹಾಗೂ ಕಿಸಾನ್ ಡೋನ್ ಪ್ರದರ್ಶನ, ಕೃಷಿ ತಜ್ಞರೊಂದಿಗೆ ಸಮಾಲೋಚನೆ, ರೈತರ ಆವಿಷ್ಕಾರಗಳು, ವಿಶೇಷ ಸಾಧನೆಗೈದ ರೈತರೊಂದಿಗೆ ಸಂವಾದ, ಕೃಷಿ ಅರಣ್ಯ, ಮೇವಿನ ಬೆಳೆಗಳ ತಾಂತ್ರಿಕತೆ, ಪಶು ಸಂಗೋಪನೆ ಹಾಗೂ ಜಾನುವಾರುಗಳ ಪ್ರದರ್ಶನ, ಮೌಲ್ಯವರ್ಧನೆ, ದ್ವಿತೀಯ ಕೃಷಿ ಮತ್ತು ಸಮುದಾಯ ವಿಜ್ಞಾನ ತಾಂತ್ರಿಕತೆಗಳು ಈ ಬಾರಿ ಮೇಳದ ಆಕಷ೯ಣೆಗಳಾಗಲಿವೆ.
ಕೃಷಿ ಪರಿಕರಗಳು (ಬೀಜ, ರಸಾಯನಿಕ ಗೊಬ್ಬರ, ಕೀಟನಾಶಕ, ರೋಗನಾಶಕ, ಕಳೆನಾಶಕ, ಬೆಳೆವರ್ಧಕ), ನರ್ಸರಿ ಮಳಿಗೆಗಳು, ಪ್ರಕಟಣೆಗಳ ಮಳಿಗೆಗಳು/ ಹಣಕಾಸು ಸಂಸ್ಥೆಗಳು,ನೀರಾವರಿ ಮತ್ತು ಕೃಷಿ ಉಪಕರಣಗಳು, ಕೃಷಿ ಯಂತ್ರೋಪಕರಣಗಳ ಮಳಿಗೆಗಳು(Machinary exhibition), ಭಾರಿ ಯಂತ್ರೋಪಕರಣಗಳ ಮಳಿಗೆಗಳು, ಕೃಷಿ ಬಳಕೆಯ ಪ್ಲಾಸ್ಟಿಕ್ ಮಳಿಗೆಗಳು. ಆಹಾರ ಮಳಿಗೆಗಳು, ಜಾನುವಾರು ಪ್ರದರ್ಶನ ಮಳಿಗೆಗಳು, ಸಂಶೋಧನಾ ತಾಕುಗಳು, ವಿಶ್ವವಿದ್ಯಾಲಯದ ಮಳಿಗೆಗಳು. ಬೀಜ ಘಟಕದ ಮಳಿಗೆಗಳು ಮತ್ತು ಇತರೆ ಮಳಿಗೆಗಳು ಇರಲಿವೆ
ವಿಮಾ ವ್ಯಾಪ್ತಿಗೆ ಅಳವಡಿಸಿರುವ ಕೃಷಿ ಮೇಳದ ಆವರಣ, ಸನ್ನದ್ಧ ಸ್ಥಿತಿಯಲ್ಲಿರುವ ಅಗ್ನಿ ಶ್ಯಾಮಕ ವಾಹನ ಮೊಬೈಲ್ ಎ.ಟಿ.ಎಂ. ವಾಹನಗಳು, ಕ್ಷೇತ್ರ ಪ್ರಾತ್ಯಕ್ಷಿಕೆಗಳಿಗೆ ಭೇಟಿ, ಉಚಿತ ವೈದ್ಯಕೀಯ ಸಲಹಾ ಕೇಂದ್ರ, ಸಾರಿಗೆ ನಿರ್ವಹಣಾ ವ್ಯವಸ್ಥೆ ಮತ್ತು ಪೋಲೀಸ್ ಸಹಾಯ ಕೇಂದ್ರಗಳು ಇರುತ್ತವೆ.
ಮೇಳದ ಮೊದಲನೆಯ ದಿನದಂದು ದಿ. 21 ಮುಂಜಾನೆ 10.30 ಗಂಟೆಗೆ ಕೃಷಿಮೇಳ ವೇದಿಕೆಯಲ್ಲಿ ಬೀಜ ಮೇಳ ಉದ್ಘಾಟನೆ, ಮಧ್ಯಾಹ್ನ 2.30 ರಿಂದ ಕೃಷಿ ಮೇಳ ವೇದಿಕೆಯಲ್ಲಿ "ಆಧುನಿಕ ಕೃಷಿ ತಾಂತ್ರಿಕ ಅಳವಡಿಕೆಯಲ್ಲಿ ಯುವ ಪೀಳಿಗೆ ಮತ್ತು ನವೋದ್ಯಮಿಗಳ ಪಾತ್ರ" ಕುರಿತ ವಿಚಾರಗೋಷ್ಠಿ ಕಾರ್ಯಕ್ರಮ ಹಾಗೂ ಮಧ್ಯಾಹ್ನ 3.30 ರಿಂದ ರೈತರಿಂದ ರೈತರಿಗಾಗಿ ಕಾರ್ಯಕ್ರಮ (ಪ್ರಗತಿಪರ ರೈತರ ಅನಿಸಿಕೆಗಳು) ಏರ್ಪಡಿಸಲಾಗಿದೆ.
ಎರಡನೆಯ ದಿನದಂದು ದಿ.22 ರಂದು ಕೃಷಿಮೇಳ ಮುಖ್ಯ ವೇದಿಕೆಯಲ್ಲಿ ಮುಂಜಾನೆ 10.30 ಘಂಟೆಗೆ ಕೃಷಿ ಮೇಳ-2024 ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ, ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಇವರಿಂದ ನೆರವೇರುವುದು ಹಾಗೂ ಮಧ್ಯಾಹ್ನ 2.30 ಘಂಟೆಗೆ ಕೃಷಿ ಮೇಳ ವೇದಿಕೆಯಲ್ಲಿ "ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಸಾವಯವ ಹಾಗೂ ನೈಸರ್ಗಿಕ ಕೃಷಿಯ ಪಾತ್ರ" ಕುರಿತ ವಿಚಾರಗೋಷ್ಠಿ ಕಾರ್ಯಕ್ರಮ ಮಧ್ಯಾಹ್ನ 3.30 ಘಂಟೆಗೆ ರೈತರಿಂದ ರೈತರಿಗಾಗಿ ಕಾರ್ಯಕ್ರಮ (ಪ್ರಗತಿಪರ ರೈತರ ಅನಿಸಿಕೆಗಳು) ಏರ್ಪಡಿಸಲಾಗಿದೆ.
ಮೂರನೇ ದಿನದಂದು ದಿ.23 ರ ಮುಂಜಾನೆ 10.00 ಗಂಟೆಗೆ "ಪರಿಕರಗಳ ಸಾಮರ್ಥ್ಯ ಹೆಚ್ಚಿಸಲು ಮತ್ತು ಉತ್ಪನ್ನಗಳ ಮೌಲ್ಯವರ್ಧನೆ ವೃದ್ಧಿಸಲು ದ್ವಿತೀಯ ಕೃಷಿ", ಮುಂಜಾನೆ 11.30 ಗಂಟೆಗೆ "ಬರ ನಿರ್ವಹಣೆಯಲ್ಲಿ ಮಣ್ಣು ಮತ್ತು ನೀರಿನ ಸಂರಕ್ಷಣಾ ಕ್ರಮಗಳು" ಹಾಗೂ ಮಧ್ಯಾಹ್ನ 2.30 ಗಂಟೆಗೆ "ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಕೈಗೊಳ್ಳಬೇಕಾದ ಬೆಳೆ ಪದ್ಧತಿಗಳು ಹಾಗೂ ಕೃಷಿ ತಾಂತ್ರಿಕತೆಗಳು" ಕುರಿತ ವಿಚಾರಗೋಷ್ಠಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಮಧ್ಯಾಹ್ನ 3.30 ಗಂಟೆಗೆ ರೈತರಿಂದ ರೈತರಿಗಾಗಿ ಕಾರ್ಯಕ್ರಮ (ಪ್ರಗತಿಪರ ರೈತರ ಅನಿಸಿಕೆಗಳು) ನಡೆಯಲಿದೆ.
ನಾಲ್ಕನೇಯ ದಿನದಂದು ದಿ. 24 ರ ಮುಂಜಾನೆ 10.30 ಗಂಟೆಗೆ ಕೃಷಿಮೇಳ ವೇದಿಕೆಯಲ್ಲಿ "ಎಣ್ಣೆಕಾಳು ಹಾಗೂ ದ್ವಿದಳ ಧಾನ್ಯ ಉತ್ಪಾದನೆ ಹೆಚ್ಚಿಸಲು ಅಗತ್ಯ ಕೃಷಿ ತಾಂತ್ರಿಕತೆಗಳು" ಚರ್ಚಾಗೋಷ್ಠಿ, ಮುಂಜಾನೆ 11.30 ಗಂಟೆಗೆ ಕನ್ನಡ ಕೃಷಿ ಗೋಷ್ಠಿ,ಮಧ್ಯಾಹ್ನ 2.30 ಗಂಟೆಗೆ ರೈತರಿಂದ ರೈತರಿಗಾಗಿ ಕಾರ್ಯಕ್ರಮ (ಪ್ರಗತಿಪರ ರೈತರ ಅನಿಸಿಕೆಗಳು) ಇರಲಿವೆ ಎನ್ನುವುದು ಧಾರವಾಡ ಕೃಷಿ ವಿವಿ ಕುಲಪತಿ ಡಾ.ಪಿ.ಎಲ್.ಪಾಟೀಲ ವಿವರಣೆ.
ಸೆ. 22 ರಂದು ಬೆಳಿಗ್ಗೆ 10-30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಳ ಉದ್ಘಾಟಿಸುವರು. ಉಪಮುಖ್ಯಮಂತ್ರಿ ಸಚಿವ ಡಿ.ಕೆ.ಶಿವಕುಮಾರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯ ಸಚೇತಕ ಸಲೀಂ ಅಹ್ಮದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಉಪಸ್ಥಿತರಿರುವರು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕಾರ್ಯಕ್ರಮದಲ್ಲಿ ಕೃಷಿ ಪ್ರಕಟಣೆಗಳ ಬಿಡುಗಡೆ ಮಾಡುವರು. ಸಚಿವರಾದ ಹೆಚ್.ಕೆ.ಪಾಟೀಲ, ಎಮ್.ಬಿ.ಪಾಟೀಲ, ಸತೀಶ ಜಾರಕಿಹೊಳಿ, ಶಿವಾನಂದ ಪಾಟೀಲ, ಆರ್.ಬಿ.ತಿಮ್ಮಾಪುರ, ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಮಂಕಾಳ್ ವೈದ್ಯ ಗೌರವ ಅತಿಥಿಗಳಾಗಿ ಭಾಗವಹಿಸವರು. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ ಅಧ್ಯಕ್ಷತೆ ವಹಿಸುವರು.
ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ (FRUITS ID) ಪ್ರೊಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುದು.
ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.
ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು (FRUITS ID) ಪ್ರೊಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೊಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನುಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ (FRUITS ID) ಪ್ರೊಟ್ಸ್ ಐಡಿ ಸೃಜಿಸಿಕೊಳ್ಳಬಹುದು. (FRUITS ID) ಪ್ರೊಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.
ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್/Aadhaar number ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ
ರಾಷ್ಟ್ರೀಯ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್(National horticulture mission) ಯೋಜನೆಯಡಿ ವಿವಿಧ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ; ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(Pradhan mantri Krishi sinchayi Yojana); ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ(Drip irrigation)ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್ರವರೆಗೆ ಶೇಕಡಾ 90%) ಸಹಾಯಧನ.ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ(NAREGA) ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಕೃಷಿಹೊಂಡ, ಪ್ಯಾಕ್ಹೌಸ್, ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(Fiber Doti)(ಅಡಿಕೆ ಕಟಾವು ಮಾಡಲು) ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ
https://horticulturedir.karnataka.gov.in/info-2/Facilities+available+to+farmers/kn
ವಿವಿಧ ಯೋಜನೆಗಳು:
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ:(MGNAREGA)
ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೆÇೀಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ(Farm pond), ಬದುಗಳ ನಿರ್ಮಾಣ, ಕೊಳವೆ ಬಾವಿ(Borewell) ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:(National Horticulture mission)
ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ(Farm pond), ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಯಾಕ್ಹೌಸ್(Pack house) ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ:
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.75 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.
ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ:
ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಮತ್ತು ಬೈಯೋಡೈಜಿಸ್ಟರ್ ಮತ್ತು ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಸಹ ಅರ್ಜಿ ಆಹ್ವಾನಿಸಲಾಗಿದೆ.
ಮೇಲ್ಕಂಡ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಲಾಗಿದೆ. ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.
]]>
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
ರಾಜ್ಯ ಸರ್ಕಾರವು ಸಾಮಾನ್ಯ ಜನರ ಮತ್ತು ಕೂಲಿ ಕಾರ್ಮಿಕರ ಏಳಿಗೆಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಜಾರಿಗೆ ತಂದಿದ್ದಾರೆ.
ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ ವೈಯಕ್ತಿಕ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಯ ಈ ಕೆಳಕಂಡ ವರ್ಗಗಳಲ್ಲಿ ಯಾವುದಾದರೂ ಒಂದು ವರ್ಗದಲ್ಲಿ ಅರ್ಹರಾಗಿರತಕ್ಕದ್ದು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ
ಅಲೆಮಾರಿ ಬುಡಕಟ್ಟುಗಳು
ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು
ಮಹಿಳಾ ಪ್ರಧಾನ ಕುಟುಂಬಗಳು
ವಿಕಲಚೇತನ ಕುಟುಂಬಗಳು
ಭೂ ಸುಧಾರಣಾ ಫಲಾನುಭವಿಗಳು
ವಸತಿ ಯೋಜನೆಗಳ ಫಲಾನುಭವಿಗಳು
ಅರಣ್ಯ ಹಕ್ಕು ಕಾಯಿದೆ 2006ರ ಫಲಾನುಭವಿಗಳು
ಸಣ್ಣ ಮತ್ತು ಅತಿ ಸಣ್ಣ ರೈತರು
ಇದನ್ನೂ ಓದಿ
1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming subsidy scheme Karnataka
https://krushirushi.in/Dairy-farming-subsidy-scheme-karnataka-1428
ಫಲಾನುಭವಿಯು ವೈಯಕ್ತಿಕ ಸೌಲಭ್ಯ ಪಡೆಯಲು
ಫಲಾನುಭವಿಯು ಕಡ್ಡಾಯವಾಗಿ ನರೇಗಾ ಯೋಜನೆಯ ಜಾಬ್ ಕಾರ್ಡ್ ಹೊಂದಿರಬೇಕು
ಫಲಾನುಭವಿಗೆ ನೀಡಲಾದ ವೈಯಕ್ತಿಕ ಕಾಮಗಾರಿಯಲ್ಲಿ ಆತನ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಾದರು ಕೆಲಸ ನಿರ್ವಹಿಸಬೇಕು
ನರೇಗಾ ಯೋಜನೆಯಡಿ ಫಲಾನುಭವಿಕೆ ನೀಡಬಹುದಾದ ವಯಕ್ತಿಕ ಕಾಮಗಾರಿಗಳ ಗರಿಷ್ಠ ಮಟ್ಟದ ಮಿತಿಯನ್ನು 2 ಲಕ್ಷಗಳಿಗೆ ನಿಗದಿಪಡಿಸಿ ಸದರಿ ಗರಿಷ್ಠ ಮೊತ್ತದ ಮಿತಿಯನ್ನು ಹೆಚ್ಚಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗಿರುತ್ತದೆ
ಯೋಜನೆ ಅಡಿ ನೊಂದಾಯಿತವಾದ ಒಂದು ವರ್ಷ ಕುಟುಂಬವು ತನ್ನ ಜೀವಿತಾವಧಿಯಲ್ಲಿ ಗರಿಷ್ಠ ಎರಡು ವರೆ ಲಕ್ಷದ ಗಳವರೆಗೆ ಯೋಜನೆ ಅಡಿ ನೀಡಲಾಗುವ ವೈಯಕ್ತಿಕ ಕಾಮಗಾರಿಗಳನ್ನು ಪಡೆದುಕೊಳ್ಳಬಹುದಾಗಿದೆ
ನರೇಗಾ ಯೋಜನೆಯಡಿ ಕೃಷಿಹೊಂಡ ನಿರ್ಮಾಣ
ನರೇಗಾ ಯೋಜನೆ ಅಡಿ ಅರ್ಹ ಫಲಾನುಭವಿಯು ಯೋಜನೆ ಅಡಿ ನಿರ್ಮಿಸಿಕೊಂಡ ಕೃಷಿಹೊಂಡ ಕಾಮಗಾರಿಯನ್ನು ಮುಂದಿನ ಐದು ವರ್ಷಗಳವರೆಗೆ ಮುಚ್ಚತಕ್ಕದ್ದಲ್ಲ.
ಒಂದು ವೇಳೆ ಫಲಾನುಭವಿಯು ಕೃಷಿ ಹೊಂಡವನ್ನು ಮುಚ್ಚಿದ್ದಲ್ಲಿ ಕೃಷಿಹೊಂಡ ನಿರ್ಮಾಣಕ್ಕಾಗಿ ತಗಲಿದ ವೆಚ್ಚ ಹಾಗೂ ಶೇಕಡ 18ರಷ್ಟು ಬಡ್ಡಿ ಸೇರಿ ಸರ್ಕಾರಕ್ಕೆ ಬರಣ ಮಾಡತಕ್ಕದ್ದು
ಕೃಷಿ ಹೊಂಡ ನಿರ್ಮಾಣ ಕಾಮಗಾರಿಯನ್ನು ಅನುಷ್ಠಾನಗೊಳಿಸುವ ಮುಂಚೆ ಫಲಾನುಭವಿಗಳಿಂದ ಮುಚ್ಚಳಿಕೆ ಪತ್ರವನ್ನು ಕಡ್ಡಾಯವಾಗಿ ಪಡೆಯತಕ್ಕದ್ದು
ಕೃಷಿ ಹೊಂಡ ಕಾಮಗಾರಿಗಳ ಕ್ರಿಯಾಯೋಜನೆಯನ್ನು ಅನುಮೋದನೆಗಾಗಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸುವಾಗ ಮುತ್ತಳಿಕೆ ಪತ್ರದ ಪ್ರತಿಯನ್ನು ಲಗತ್ತಿಸುವುದು
ಕಾಮಗಾರಿಗಳ ಆಯ್ಕೆ ಮಾಡುವಾಗ ತಾಂತ್ರಿಕವಾಗಿ ಸೈಟ್ ಫೀಸಿಬಿಲಿಟಿ ಇರುವುದನ್ನ ಖಚಿತಪಡಿಸಿಕೊಳ್ಳುವುದು
ಕೃಷಿಹೊಂಡ ಕಾಮಗಾರಿಯ ಅನುಮೋದನೆಯಾದ ಆರ್ಥಿಕ ವರ್ಷದಲ್ಲಿಯೇ ಕಡ್ಡಾಯವಾಗಿ ಪೂರ್ಣಗೊಳಿಸುವುದು
ಅನುಷ್ಠಾನಗೊಳಿಸುವಾಗ ಮೂರು ಹಂತದ Geo Tag ಮಾಡುವ ಪ್ರಕ್ರಿಯೆಯನ್ನು ನಿಗದಿ ಅವಧಿಯೊಳಗೆ ಪೂರ್ಣಗೊಳಿಸುವುದು ಕಡ್ಡಾಯವಾಗಿರುತ್ತದೆ
ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಸಿಟಿಜನ್ ಇನ್ಫಾರ್ಮಶನ್ ಬೋರ್ಡ್ ಅಳವಡಿಸತಕ್ಕದ್ದು.
ದನದ ಶೆಡ್ ನಿರ್ಮಾಣಕ್ಕೆ 57,000 ಸಹಾಯಧನ
ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ದನಗಳ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ಯ ಇಲಾಖೆಗಳು ಮೊದಲು ನೀಡುತ್ತಿರುವ ಸಹಾಯಧನವನ್ನು ಹೆಚ್ಚಳ ಮಾಡಿ, ರಾಜ್ಯದ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿಯನ್ನು ನೀಡಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಅಂದರೆ 2022ರ ಸಾಲಿನ ಏಪ್ರಿಲ್ 1 ರಿಂದ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೂಲಿ ಕಾರ್ಮಿಕರ ಮೊತ್ತವನ್ನು ರೂಪಾಯಿ 289ರೂ.ನಿಂದ ರೂಪಾಯಿ 309ರೂ.ವರೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಮಿಕರ ಕೂಲಿ ಮೊತ್ತವನ್ನು ಹೆಚ್ಚಿಸಿ ಕೂಲಿಕಾರರಿಗೆ ಸಿಹಿಸುದ್ದಿ ನೀಡಿದೆ.
ರೈತರಿಗೆ ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣದ ಬಗ್ಗೆ ಅಂದರೆ ಯಾರು ಹಸುಗಳು ಅಥವಾ ಎಮ್ಮೆಗಳನ್ನು ಸಾಕಿದ್ದಾರೋ ಅಥವಾ ನಿಮ್ಮ ಮನೆಯಲ್ಲಿ ಅಥವಾ ನಿಮ್ಮ ಮನೆ ಹಿಂದೆ ಇರುವ ಜಾಗದಲ್ಲಿ ಅಥವಾ ಎಲ್ಲಿ ನಿಮಗೆ ಸಂತ ಜಾಗವಿದೆಯೋ ಅಲ್ಲಿ ನೀವು ದನದ ಕೊಟ್ಟಿಗೆ ಅಥವಾ ದನದ ಶೆಡ್ ಅನ್ನು ನಿರ್ಮಾಣ ಮಾಡಲು ಪಂಚಾಯಿತಿ ವತಿಯಿಂದ ರೈತರಿಗೆ ಮತ್ತು ಆಸಕ್ತರಿಗೆ ಸಹಾಯಧನ ನೀಡಲಾಗುತ್ತದೆ.
ಸಾಮಾನ್ಯ ವರ್ಗದ ಜನರಿಗೆ ಸರಿ ಸುಮಾರು ರೂಪಾಯಿ 20,000 ರೂಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ವತಿಯಿಂದ ಅದನ್ನು ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸುಮಾರು 43,000ರೂಗಳ ಸಹಾಯಧನವನ್ನು ಈ ರಾಜ್ಯ ಸರ್ಕಾರದ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಪಂಚಾಯಿತಿ ಕಡೆಯಿಂದ ನೀಡುವ ಈ ಒಟ್ಟು ಮೊತ್ತದಲ್ಲಿ ಅಂದರೆ ಈ 43,000ರೂ.ಗಳಲ್ಲಿ, ಫಲಾನುಭವಿ ರೈತರಿಗೆ ಸುಮಾರು 8,996ರೂ.ಗಳನ್ನು ಅವರ ಕೂಲಿ ಮೊತ್ತವಾಗಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಈ ಸಹಾಯಧನವನ್ನು ನರೇಗಾ ಕಾರ್ಡ್ ಹೊಂದಿರುವ ರೈತರಿಗೆ ಅಥವಾ ಅರ್ಜಿದಾರರಿಗೆ ಮಾತ್ರ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಶೆಡ್ ಅಥವಾ ದನದ ಕೊಟ್ಟಿಗೆ ನಿರ್ಮಾಣ ಮಾಡಲಿಕ್ಕೆ ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಉಳಿದ ಮೊತ್ತವನ್ನು ಅಂದರೆ ಉಳಿದ 34,000ರೂ.ಗಳನ್ನು ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಾಮಾನ್ಯ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಇದರ ಅರ್ಧ ಮೊತ್ತ ಸಿಗುತ್ತಿತ್ತು. ಅಂದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ರೂಪಾಯಿ 8,996ರೂ.ಗಳ ಕೂಲಿಯನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಲ್ಲರಿಗೂ ಸಮಾನವಾದ ಕೂಲಿಯನ್ನು ನೀಡಲಾಗುತ್ತದೆ.
ಆದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಿಗುವ ಉಳಿದ 34,000ರೂ.ಗಳ ಹಣದಲ್ಲಿ ಸಾಮಾನ್ಯ್ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಈ 34,000ರೂ.ಗಳಲ್ಲಿ ಕೇವಲ ಅರ್ಧ ಮೊತ್ತವನ್ನು ನೀಡಲಾಗುತ್ತಿತ್ತು.
ಅಂದರೆ ಸರಿಸುಮಾರು 20,000ರೂ.ಗಳನ್ನು ಸಾಮಾನ್ಯ ವರ್ಗದವರಿಗೆ ಅಥವಾ ಜನರಲ್ ಕೆಟಗರಿಯವರಿಗೆ ಈ ಯೋಜನೆಯ ಅಡಿಯಲ್ಲಿ ಪಂಚಾಯಿತಿಯ ಕಡೆಯಿಂದ ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭ್ಯರ್ಥಿಗಳಿಗೆ ರೂಪಾಯಿ 43,000ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ.
ರೈತರು ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ದನದ ಕೊಟ್ಟಿಗೆ ಅಥವಾ ಶೆಡ್ ನ ಅಳತೆ ಎಷ್ಟಿರಬೇಕು?
• ರೈತರು ಈ ಯೋಜಯಡಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ಕಟ್ಟುವ ದನದ ಕೊಟ್ಟಿಗೆ ಅಥವಾ ಶೆಡ್ 5 ಫೀಟ್ ಎತ್ತರದ ಗೋಡೆಯನ್ನು ಹೊಂದಿರಬೇಕು.
• ಹಸುಗಳಿಗೆ ಮೇವು ಹಾಗೂ ನೀರಿನ ವ್ಯವಸ್ಥೆಗಾಗಿ ಗೋದಲಿಯನ್ನು ನಿರ್ಮಾಣ ಮಾಡಿರಬೇಕು.
• ಜಾನುವಾರುಗಳಿಗೆ ಶೆಡ್ ನಲ್ಲಿ ಗಾಳಿ ಮತ್ತು ಬೆಳಕು ಆಡಲು ಕೊಟ್ಟಿಗೆಗೆ ಶೆಡ್ ಶೀಟ್ಗಳನ್ನು ಹಾಕಬೇಕು.
•ಇವೆಲ್ಲವುದರ ಜೊತೆಗೆ ನೀವು ಈ ಯೋಜನೆಯಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನರೇಗಾ ನಾಮಫಲಕವನ್ನು ಕಡ್ಡಾಯವಾಗಿ ಹಾಕಬೇಕಾಗಿರುತ್ತದೆ.
• ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಿಕೊಳ್ಳಲು ರೈತರು ಮೊದಲನೆಯದಾಗಿ ತಮಗೆ ಸಂಬಂಧಪಟ್ಟ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ. ಅಂದರೆ ಈ ಯೋಜನೆಯಡಿಯಲ್ಲಿ ಯಾರ್ಯಾರು ಸಹಾಯ ಧನವನ್ನು ಪಡೆಯಬೇಕೆಂದು ಕೊಂಡಿದ್ದರೋ ಅಥವಾ ಈ ಯೋಜನೆಯ ಫಲಾನುಭವಿಯಾಗಲು ಬಯಸುವಂತಹ ಅರ್ಜಿದಾರರು ತಮ್ಮ ಹೆಸರನ್ನು ನಿಮಗೆ ಹತ್ತಿರವಿರುವ ಅಥವಾ ನಿಮಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಬೇಕಾಗಿರುತ್ತದೆ.
• ಪ್ರತಿವರ್ಷ ಜಾರಿಗೊಳಿಸುವ ಈ ಯೋಜನೆಯಲ್ಲಿ ನಿಮ್ಮ ಹೆಸರನ್ನು ಸೇರಿಸಬೇಕು. ಅಂದಾಗ ಮಾತ್ರ ನೀವು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
• ಇದಾದನಂತರ ಸಂಬಂಧಪಟ್ಟ ಪಂಚಾಯಿತಿಯ ಅಧಿಕಾರಿಗಳು ಬಂದು ನೀವು ದನದ ಕೊಟ್ಟಿಗೆ ಅಥವಾ ಶೆಡ್ಕಟ್ಟಬೇಕೆಂದು ಕೊಂಡಿರುವ ಖಾಲಿ ಜಾಗಕ್ಕೆ ಬಂದು ಭೇಟಿ ನೀಡಿ, ಆ ಜಾಗದ GPS ಅನ್ನು ಮಾಡಿ, ಆ ಜಾಗದ ಸರ್ವೆ ಮಾಡಿ ನಿಮಗೆ ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಅನುಮತಿಯನ್ನು ನೀಡುತ್ತಾರೆ.
• ಅದಾದ ನಂತರ ನೀವು ಕೊಟ್ಟಿಗೆ ಕಟ್ಟಲು ಬೇಕಾಗುವ ಸಾಮಗ್ರಿಗಳನ್ನು ಪಂಚಾಯಿತಿ ನೀಡುವ ಸಹಾಯಧನದಲ್ಲಿ ತಂದು ನಿಮ್ಮ ಕೊಟ್ಟಿಗೆ ಕಟ್ಟುವ ಕೆಲಸವನ್ನು ಪ್ರಾರಂಭಿಸಬಹುದು.
• ನೀವು ಕೊಟ್ಟಿಗೆ ಕಟ್ಟುವ ಕೆಲಸವನ್ನು ಶುರು ಮಾಡುವ ಮೊದಲು ಒಂದು ಕಲ್ಲಿನ ಬೋರ್ಡನ್ನು ಅಂದರೆ ನರೇಗಾ ನಾಮಫಲಕವನ್ನು ಬರೆಸಬೇಕಾಗಿರುತ್ತದೆ.
ಈ ಬೋರ್ಡ್ ನೀವು ಯಾವ ಯೋಜನೆಯಡಿ ಈ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದೀರಿ.ಎಂಬುದನ್
ಇದರಲ್ಲಿ ನೀವು ಯೋಜನೆ ಪಡೆಯುತ್ತಿರುವ ವರ್ಷ, ಗ್ರಾಮ ಪಂಚಾಯಿತಿ ಹೆಸರು, ತಾಲೂಕು ಮತ್ತು ಜಿಲ್ಲೆಯನ್ನು ಒಳಗೊಂಡಿರುತ್ತದೆ.
ಈ ನರೇಗಾ ನಾಮಫಲಕಾದಲ್ಲಿ ಫಲಾನುಭವಿಯ ಹೆಸರು ನಮೂದಿಸಲಾಗಿರುತ್ತದೆ.
ಹಾಗೂ ಅದೇ ರೀತಿ ಫಲಾನುಭವಿಯು ಈ ನರೇಗಾ ಉದ್ಯೋಗ ಖಾತರಿ ಯೋಜನೆಯನ್ನು ಪಡೆದುಕೊಳ್ಳುತ್ತಿರುವ ಕಾಮಗಾರಿ ಸಂಕೇತವನ್ನು ಒಳಗೊಂಡಿರುತ್ತದೆ.
ಈ ನರೇಗಾ ನಾಮಫಕದಲ್ಲಿ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಒಟ್ಟು ಬಿಡುಗಡೆಯಾದ ಮೊತ್ತ, ಎಷ್ಟು ಬಿಡುಗಡೆಯಾಗಿದೆ? ಯಾವುದಕ್ಕೆಲ್ಲ ಬಿಡುಗಡೆಯಾಗಿದೆ? ಖರ್ಚಾದ ಮೊತ್ತ ಮತ್ತು ಕೊಟ್ಟಿಗೆ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳ ಮೊತ್ತ, ಎಲ್ಲವನ್ನು ಒಳಗೊಂಡಿರುತ್ತದೆ.
ನರೇಗಾ ಯೋಜನೆಯ ಅಡಿಯಲ್ಲಿ ಸಹಾಯಧನ ಪಡೆದುಕೊಳ್ಳಲು ದನದ ಕೊಟ್ಟಿಗೆ ಹೇಗಿರಬೇಕು? ಅದರ ಉದ್ದ ಮತ್ತು ಅಳತೆಗಳು ಎಷ್ಟಿರಬೇಕು?
* ದನದ ಕೊಟ್ಟಿಗೆಯ ಅಗಲವು ಸುಮಾರು ನಾಲ್ಕು ಮೀಟರುಗಳಷ್ಟು ಇರಬೇಕು.
* ದನದ ಕೊಟ್ಟಿಗೆ ಅಥವಾ ಶೆಡ್ನ ಉದ್ದವು ಏಳು ಮೀಟರ್ಗಳಷ್ಟು ಇರಬೇಕು.
*ಅಂದರೆ ಸಾಮಾನ್ಯವಾಗಿ 22 ಅಡಿ ಉದ್ದ ಮತ್ತು13 ಅಡಿ ಅಗಲವನ್ನು ಹೊಂದಿರಬೇಕಾಗುತ್ತದೆ.
* ದನದ ಕೊಟ್ಟಿಗೆಯು ಕನಿಷ್ಠ ಅಗಲ ಮತ್ತು ಉದ್ದವಗಳನ್ನು ಹೊಂದಿರಬೇಕಾಗುತ್ತದೆ.
* ಇದಕ್ಕಿಂತ ಕಡಿಮೆ ಉದ್ದ ಮತ್ತು ಅಗಲಗಳ ಅಳತೆಗಳನ್ನು ಹೊಂದಿದ್ದರೆ ನಿಮಗೆ ಸಿಗುವ ಸಹಾಯಧನದಲ್ಲಿ ಮೊತ್ತವು ಕಡಿಮೆಯಾಗುತ್ತದೆ. ಅಂದರೆ ನಿಮಗೆ ಸಿಗುತ್ತಿರುವ ಸಾಮಗ್ರಿ ಮೊತ್ತದಲ್ಲಿ ಸಹಾಯಧನ ಕಡಿಮೆಯಾಗುತ್ತದೆ.
* ಇದಕ್ಕಿಂತ ಜಾಸ್ತಿ ಉದ್ದ ಮತ್ತು ಅಗಲಗಳನ್ನು ಹೊಂದಿರಬಹುದು. ಆದರೆ ಈ ಕನಿಷ್ಠ ಅಳತೆಗಳ ಕೆಳಗೆ ಅಳತೆಗಳನ್ನು ಹೊಂದಿರಬಾರದು.
* ದನದ ಕೊಟ್ಟಿಗೆ ನಿರ್ಮಾಣದ ಸಮಯದಲ್ಲಿ ದನಗಳನ್ನು ಕಟ್ಟುವ ಜಾಗದಲ್ಲಿ ನೆಲವನ್ನು ಕಾಂಕ್ರೀಟ್ ನಿಂದ ಮಾಡಿರಬೇಕಾಗಿರುತ್ತದೆ. ಯಾವುದೇ ತರದ ಚಪ್ಪಡಿ ಕಲ್ಲುಗಳನ್ನು ಮತ್ತು ಇನ್ನಿತರೆ ರಬ್ಬರ್ ಮ್ಯಾಟ್ ಅಥವಾ ನೆಲಹಾಸುಗಳನ್ನು ಬಳಸುವಂತಿಲ್ಲ. ನೀವು ನೆಲವನ್ನು ಕಾಂಕ್ರಿಟ್ ನಿಂದ ಮಾಡಿರದಿದ್ದರೆ ನಿಮಗೆ ಸಹಾಯಧನವನ್ನು ನೀಡಲು ಬರುವುದಿಲ್ಲ.
ಮೊದಲು ನೀವು ದನದ ಕೊಟ್ಟಿಗೆ ನಿರ್ಮಾಣ ಮಾಡಬೇಕೆಂದುಕೊಳ್ಳುವ ಖಾಲಿ ಜಾಗದಲ್ಲಿ ಫೋಟೋ ತೆಗೆಯಬೇಕು. ನಂತರ 40MM ಜೆಲ್ಲಿ ಕಲ್ಲು ಅಂದರೆ(ಕಡಿಗಳು) ಗಳನ್ನು ಹಾಕಿ ಸಮತಟ್ಟು ಮಾಡಬೇಕಾಗಿರುತ್ತದೆ. ಇದಾದ ನಂತರ ಅದರ ಮೇಲೆ ಕಾಂಕ್ರೆಟ್ ನಿಂದ ನೆಲವನ್ನು ಮುಚ್ಚಬೇಕಾಗುತ್ತದೆ.
* ದನಗಳ ಕೊಟ್ಟಿಗೆಯಲ್ಲಿ ಮೇವು ಅಥವಾ ನೀರಿನ ಸೌಲಭ್ಯಕ್ಕಾಗಿ ಗೋದಲಿಯನ್ನು ಇಟ್ಟಿಗೆಯನ್ನು ಬಳಸಿ ಕಟ್ಟಬೇಕು. ಕಟ್ಟಿದ ನಂತರ ಇಟ್ಟಿಗೆಗಳನ್ನು ಪ್ಲಾಸ್ಟರ್ ನಿಂದ ಮುಚ್ಚಬೇಕು.
* ಹಾಗೆಯೇ ದನಗಳನ್ನು ಗೋದಲಿಗೆ ಕಟ್ಟಲು ಕಬ್ಬಿಣದ ಬಳೆಗಳನ್ನು ಸಹ ಬಳಸಬಹುದು.
* ದನಗಳ ಮೂತ್ರ ಮತ್ತು ಕೊಟ್ಟಿಗೆ ತೊಳೆದ ನಂತರ ಅದರ ನೀರು ಸುಲಭವಾಗಿ ಹೋಗಲು ಒಂದು ಗುಂಡಿ ಅಥವಾ ಒಂದು ಚರಂಡಿ ವ್ಯವಸ್ಥೆಯನ್ನು ಮಾಡಬೇಕಾಗಿರುತ್ತದೆ. ಅಥವಾ ನಿಮಗೆ ಚರಂಡಿ ವ್ಯವಸ್ಥೆ ಇಲ್ಲದಿದ್ದಲ್ಲಿ ನೀರನ್ನು ಇಂಗು ಗುಂಡಿಗೆ ಬಿಡಬಹುದು.
* ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ದನದ ಕೊಟ್ಟಿಗೆಯ ಸುತ್ತಲೂ ಗೋಡೆಯನ್ನು ಕಟ್ಟಬೇಕಾಗುತ್ತದೆ.
* ಈ ಕೊಟ್ಟಿಗೆಯನ್ನ ನಿರ್ಮಾಣ ಮಾಡಲು ಸಾಮಾನ್ಯವಾಗಿ 22,000ರೂ.ಗಳ ಖರ್ಚು ಬರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಒಟ್ಟು ಸಹಾಯಧನ 43,000ರೂ.ಗಳು ಬರುತ್ತದೆ.
ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನ ಹೆಚ್ಚಳ ಮಾಡಿದ ನಂತರ ಒಟ್ಟು ಸಹಾಯಧನವಾಗಿ 57,000 ರೂ ಸಿಗುತ್ತದೆ. ಈ ಮೊತ್ತವನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೂ ಸಮವಾಗಿ ನೀಡಲಾಗುತ್ತದೆ. ಈ ಮೊತ್ತದಲ್ಲಿ ಅಂದರೆ ಒಟ್ಟಾರೆ 57,000ರೂ.ಗಳಲ್ಲಿ ಸರಿ ಸುಮಾರು 10,556ರೂ.ಗಳನ್ನು ಕೂಲಿ ಮೊತ್ತವಾಗಿ ಈ ಯೋಜನೆಯಡಿ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಸುಮಾರು 46,644ರೂ.ಗಳನ್ನು ಈ ಯೋಜನೆಯಡಿಯಲ್ಲಿ ದನದ ಕೊಟ್ಟಿಗೆ ಅಥವಾ ದನದಶೆಡ್ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಈ ಯೋಜನೆಯ ಅಡಿಯಲ್ಲಿ ಸಹಾಯಧನ ನೀಡಲಾಗುತ್ತದೆ.
ಫಲಾನುಭವಿಗಳು ಜಾನುವಾರು ಶೆಡ್ ಅಥವಾ ಕೊಟ್ಟಿಗೆಯನ್ನು ನಿರ್ಮಿಸಿಕೊಳ್ಳಲು,
#ಕನಿಷ್ಠ 4 ಜಾನುವಾರುಗಳನ್ನು ಹೊಂದಿರಬೇಕು.
#ಸಂಬಂಧಪಟ್ಟ ಪಶುವೈದ್ಯಾಧಿಕಾರಿಗಳಿಂದ ಜಾನುವಾರು ಇರುವ ಕುರಿತ ದೃಢೀಕರಣ ಪತ್ರವನ್ನು ಪಡೆಯಬೇಕು.
#ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಉದ್ಯೋಗ ಖಾತರಿ ಚೀಟಿ ಪುಸ್ತಕವನ್ನು ಹೊಂದಿರಬೇಕು.
#ಈ ಮೇಲಿನ ಉಲ್ಲೇಕಿಸಿದ ದಾಖಲಾತಿಗಳೊಂದಿಗೆ ಸ್ಥಳೀಯ ಗ್ರಾಮ ಪಂಚಾಯತಿಗೆ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
# ಗ್ರಾಮ ಪಂಚಾಯಿತಿಯವರ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಫಲಾನುಭವಿಯ ಹೆಸರು ಸೇರಿಸಿಕೊಂಡು ಮೇಲಾಧಿಕಾರಿಗಳಿಂದ ಅನುಮೋದನೆ ಪಡೆದ ನಂತರ ರೈತರು ಅವರ ದನದ ಕೊಟ್ಟಿಗೆಯ ಕಾಮಗಾರಿಯನ್ನು ಪ್ರಾರಂಭಿಸಬೇಕು.
# ಈ ಹಿಂದೆ ಉದ್ಯೋಗ ಖಾತರಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 43,000ರೂ.ಗಳ ಸಹಾಯಧನ ಹಾಗೂ ಸಾಮಾನ್ಯ ವರ್ಗದವರಿಗೆ 19,000 ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನೀಡಲಾಗುತ್ತಿತ್ತು.
ಈ ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚಿಸಿದ ಸಹಾಯಧನದ ಬಗ್ಗೆ ತಿಳಿಯಬೇಕೆಂದರೆ,
ಸಾಮಾನ್ಯ ವರ್ಗದವರಿಗೂ ಸಹ 57,000ರೂ.ಗಳ ಸಹಾಯಧನ ಈ ಯೋಜನೆ ಅಡಿಯಲ್ಲಿ ನೀಡಲಾಗುವುದು. ಸಾಮಾನ್ಯವಾಗಿ 4 ಕ್ಕಿಂತ ಹೆಚ್ಚು ಜಾನುವಾರು ಸಾಕಣೆ ಮಾಡುವವರು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.
ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಜಾನುವಾರು ಸೆಡ್ ನಿರ್ಮಾಣಕ್ಕೆ ಸಹಾಯಧನದ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ರಾಜ್ಯದಲ್ಲಿ ಈ ಯೋಜನೆಯ ಲಾಭವನ್ನು ಪಡೆದುಕೊಂಡು ಸಹಸ್ರಾರು ಕುಟುಂಬಗಳು ಶೆಡ್ ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡು ಜಾನುವಾರು ಸಾಕಣೆಯೊಂದಿಗೆ ಉತ್ತಮ ಆದಾಯ ಮಾಡಿಕೊಳ್ಳುತ್ತಿದ್ದಾರೆ.
ಇದೀಗ ದನದ ಶೆಡ್ ನಿರ್ಮಾಣ ಮಾಡಿಕೊಳ್ಳಲು ಸಹಾಯ ಧನ ಹೆಚ್ಚಿಸಿದೆ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಅಥವಾ ಸಂಬಂಧಪಟ್ಟ ಪಂಚಾಯಿತಿಯನ್ನು ಸಂಪರ್ಕಿಸಿರಿ.
]]>
2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಇದ್ದಾಗ ರಾಜ್ಯದ ರೈತರ ಸಾಲಮನ್ನಾ(Bele sala manna) ಮಾಡಿದ್ದರು.ಆದರೆ ಅದರಲ್ಲಿ ಕೇಲವು ರೈತರ ದಾಖಲೆಗಳ ಕೊರತೆಯಿಂದಾಗಿ ಬಾಕಿ ಉಳಿದ ಪ್ರಕರಣಗಳಲ್ಲಿ ದಾಖಲಾತಿಗಳನ್ನು ಸಲ್ಲಿಸಿದ ನಂತರ ಸಾಲಮನ್ನಾ ಆಗುತ್ತಿದೆ.ಹಾಗಾದರೆ ಈ ಲೇಖನದಲ್ಲಿ ಯಾವೆಲ್ಲಾ ದಾಖಲಾತಿಗಳು ಬೇಕಾಗಬಹುದು ಎಂದು ಚೆಕ್ ಮಾಡಬಹುದು.
ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "Revenue department/ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು"(Revenue department services)ಮೇಲೆ ಕ್ಲಿಕ್ ಮಾಡಿ
ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ"(farmer) ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು"(Submit)ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ(Crop loan wavier) ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ(Bele sala manna list) ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ
ನಂತರ "CLWS ರೈತನ ಅರ್ಹತೆ" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್(bank) select ಮಾಡಿ,ಸಲ್ಲಿಸು/Submit ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ(crop loan wavier) ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
ಕಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ - ಭಾರತ್ ಗೌರವ್ ದ್ವಾರಕಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ.
ಈ ಪ್ಯಾಕೇಜ್ಗೆ ಒಟ್ಟು ₹30,000 ತಗುಲಲಿದ್ದು, ಈ ಪೈಕಿ ರಾಜ್ಯ ಸರ್ಕಾರದ ವತಿಯಿಂದ ಅಂದಾಜು ₹15,000 ಮೊತ್ತವನ್ನು ಭರಿಸಲಾಗುತ್ತದೆ.
ಯಾತ್ರಾರ್ಥಿಗಳು ಬುಕ್ಕಿಂಗ್ ಮೊತ್ತವಾಗಿ ₹15,000 ಅನ್ನು ಮಾತ್ರ ಪಾವತಿಸಬೇಕಾಗುತ್ತದೆ.
ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ
ಸೌಲಭ್ಯಗಳು
• ಪ್ಯಾಕೇಜ್ನಲ್ಲಿ 3 ಟೈರ್ ಎ.ಸಿ. ರೈಲಿನಲ್ಲಿ ಪ್ರಯಾಣ, ಊಟ, ವಸತಿ, ಸ್ಥಳೀಯ ಸಾರಿಗೆ ಮತ್ತು ದರ್ಶನದ ವ್ಯವಸ್ಥೆ
• ಪ್ರಯಾಣಿಸುವಾಗ ಆಧುನಿಕ ಪ್ಯಾ೦ಟ್ರಿ ಕಾರಿನಲ್ಲಿ ತೆಯಾರಿಸಿದ ತಾಜಾ ಸ್ಥಳೀಯ ಆಹಾರವನ್ನು ನೀಡಲಾಗುವುದು
• ಯಾತ್ರಾರ್ಥಿಗಳ ಆರೋಗ್ಯದ ದೃಷ್ಟಿಯಿ೦ದ ವೈದ್ಯಕೀಯ ಸಹಾಯ ವ್ಯವಸ್ಥೆ
ರೈಲು ಹತ್ತುವ ಹಾಗೂ ಇಳಿಯುವ ಸ್ಥಳಗಳು
ಬೆಂಗಳೂರು (SMVT), ತುಮಕೂರು, ಅರಸಿಕೆರೆ, ಬೀರೂರು, ದಾವಣಗೆರೆ, ಹಾವೇರಿ, ಬೆಳಗಾವಿ
ದ್ವಾರಕಾ ಯಾತ್ರೆ ತೆರಳಲು ಇಚ್ಛಿಸಿದ್ದಲ್ಲಿ ದಾಖಲೆಗಳೊಂದಿಗೆ ಆಯುಕ್ತರ ಕಚೇರಿಗೆ ನೇರವಾಗಿ ಸೆಪ್ಟೆಂಬರ್ 20ರ ಒಳಗಾಗಿ ಮನವಿ ಸಲ್ಲಿಸಬಹುದಾಗಿದೆ.
ಬುಕ್ಕಿಂಗ್ಗಾಗಿ https://www.irctctourism.com/Karnatakbgaurav?searchKey=&tagType=&travelType=Domestic§or=All&bdar=6
ವೆಬ್ಸೈಟ್ಗೆ ಭೇಟಿ ನೀಡಬಹುದು. ಅಥವಾ 9003140710, 8595931292, 8595931294, 9731641611, 8595931293, 8595931291 ಗೆ ಕರೆ ಮಾಡಿ ಟಿಕೆಟ್ ಬುಕ್ ಮಾಡಿಕೊಳ್ಳಬಹುದು.
]]>
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ(Sheep), ಮೇಕೆ(goat), ಹಂದಿ ಸಾಕಾಣಿಕೆ ಮತ್ತು ರಸಮೇವು(Silage) ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.
National livestock mission
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ
(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)
ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.
ಅವಶ್ಯಕ ದಾಖಲಾತಿಗಳು :-
1)ಆಧಾರ,
2)ಪಹಣಿ ಪತ್ರ
3)ಬ್ಯಾಂಕ್ಖಾತೆ ಸಂಖ್ಯೆ,
ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು
4)ಭಾವ ಚಿತ್ರ.
ಕ್ರ.ಸಂ |
ಘಟಕ |
ಸೌಲಭ್ಯಗಳ ವಿವರ |
|
ಹೈನುಗಾರಿಕೆ |
|
1 |
ಮಿಶ್ರತಳಿ ದನಗಳ ನಿರ್ವಹಣೆ (1+1) |
ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ |
|
ಆ. ಸುಧಾರಿತ ಎಮ್ಮೆಗಳ ನಿರ್ವಹಣೆ |
ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ |
|
ಕುರಿ ಸಾಕಾಣಿಕೆ |
|
2 |
ಕುರಿಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ |
|
ಕುರಿಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (10) |
ರೂ. 13,000 ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (20) |
ರೂ. 26,000 ರಂತೆ ಸಾಲ ಸೌಲಭ್ಯ |
|
ಮೇಕೆ ಸಾಕಾಣಿಕೆ |
|
3 |
ಮೇಕೆಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ |
|
ಮೇಕೆಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ |
4 |
ಹಂದಿ ಸಾಕಾಣಿಕೆ (10) |
ರೂ,60,000 ರಂತೆ ಸಾಲ ಸೌಲಭ್ಯ |
|
ಕೋಳಿ ಸಾಕಾಣಿಕೆ |
|
5 |
ಮಾಂಸದ ಕೋಳಿ ಸಾಕಾಣಿಕೆ |
2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ |
|
ಮೊಟ್ಟೆ ಕೋಳಿ ಸಾಕಾಣಿಕೆ |
1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ |
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್(Survey number) ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.
ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ(Bele sala) ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.
ಸಾಲ(crop loan status)ವಿವರ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು
https://landrecords.karnataka.gov.in/Service2/
ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ.
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಇದನ್ನೂ ಓದಿ
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427
ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ. ಎಂಬ ಮಾಹಿತಿ ಇರುತ್ತದೆ.
ಈ ಮಾಹಿತಿ ರೈತರಿಗೆ ತುಂಬಾ ಅನುಕೂಲವಾಗಿದೆ ಸರ್ವೇ ನಂಬರ್ ನಮೂದಿಸಿದರೆ ಸಾಕು ರೈತರು ದೇಶದ ಯಾವುದೇ ಮೂಲೆಯಿಂದಲೂ ಮಾಹಿತಿ ಪಡೆಯಬಹುದು. ಕೇವಲ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವ ಮಾಹಿತಿ ಎಲ್ಲವೂ ರೈತರಿಗೆ ಸಿಗಲಿದೆ.
ಸ್ವಾವಲಂಬಿ ಸಾರಥಿ ಯೋಜನೆ
ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.
ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು
ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.
ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.
ಡ್ರೈವಿಂಗ್ ಲೈಸೆನ್ಸ್
ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.
ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಹಿಂದುಳಿದ ವರ್ಗದವರಾಗಿರಬೇಕು.
ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ
(DL) ಡ್ರೈವಿಂಗ್ ಲೈಸೆನ್ಸ್
ಫೋಟೋ
ಮೊಬೈಲ್ ನಂಬರ್
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಿ ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 10 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು.
75% ಸಬ್ಸಿಡಿಯಲ್ಲಿ ಸರಕು ವಾಹನ, ಕಾರು ಖರೀದಿಗೆ 4 ಲಕ್ಷ ರೂಪಾಯಿ ಸಹಾಯಧನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Car subsidy scheme
ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನ
ಉದ್ದೇಶಗಳು:
• ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಈ ಕೆಳಕಂಡ೦ತೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.
• ಬ್ಯಾಂಕ್ ಸಾಲದ ಶೇ.20ರಷ್ಟು ಸಹಾಯಧನ ಅಥವಾ ಗರಿಷ್ಠ ₹1 ಲಕ್ಷ
• ಘಟಕ ವೆಚ್ಚದ ಶೇ.70ರಷ್ಟು ಸಹಾಯಧನ ಅಥವಾ ಗರಿಷ್ಠ ₹2 ಲಕ್ಷ
ಸ್ವಾವಲಂಬಿ ಸಾರಥಿ
ಸರಕು ವಾಹನ / ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ. ಸಾಲದ ಮೊತ್ತದ ಶೇ.75ರಷ್ಟು ಸಹಾಯಧನ ಅಥವಾ ಗರಿಷ್ಠ 74 ಲಕ್ಷ
ಮಳೆಯ ಕಾರಣಕ್ಕೆ ರಾಜ್ಯಾದ್ಯಂತ 80,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶ(crop loss)ವಾಗಿದ್ದು, ವಾರದೊಳಗಾಗಿ ಎಲ್ಲಾ ರೈತರಿಗೂ ಪರಿಹಾರ(parihara) ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.
ಈ ಬಗ್ಗೆ ಮಾತನಾಡಿದ ಅವರು, "ರಾಜ್ಯಾದ್ಯಂತ ಕೃಷಿ ಬೆಳೆ 78679 ಹೆಕ್ಟೇರ್ ಹಾನಿ(bele hani)ಯಾಗಿದ್ದರೆ, ತೋಟಗಾರಿಕಾ ಬೆಳೆ 2294 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ.
ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿವೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು. ಪ್ರಸ್ತುತ ರಾಜ್ಯ ಸರ್ಕಾರದ ಬಳೆ ಇರುವ ಸಂಪನ್ಮೂಲದಲ್ಲೇ ಪರಿಹಾರ ನೀಡಲಾಗುವುದು. ಇನ್ನೂ ಒಂದೂವರೆ ತಿಂಗಳ ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆಹಾನಿ(croploss)ಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು ತದನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು' ಎಂದು ತಿಳಿಸಿದರು.
ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
DETAILS OF DISTRICT RESOURCE PERSON |
||||||
SL NO |
DISTRICT |
No Of DRPs |
NAME & ADDRESS |
MOBILE NO |
E-MAIL ID |
|
1 |
Bagalkote |
3 |
Vijayakshmi |
8618099490 |
||
|
|
Suryakant G Mohare |
9449712250 |
|||
|
|
Praveen Pujari |
9741403143 |
|||
2 |
Bengaluru Urban/Rural |
8 |
Abhishek |
7411918648 |
||
|
|
Gowtham |
9448752379 |
|||
|
|
Pavithra |
7483011419 |
|||
3 |
|
|
Thirumalesh |
9739868651 |
||
|
|
T M SACHITHANANDAM |
9952913999 |
|||
|
|
Shivakumar B L |
9449671735 |
|||
|
|
Umesh Neelgund |
9900061389 |
|||
|
Bellary |
6 |
Kotihal Hiremath Nagabasaiah |
9108460621 |
||
|
|
|
P. Shalem Raj |
8880085079 |
||
|
|
|
Harshitha |
7349092680, |
||
4 |
7337600124 |
|||||
|
|
Arun U |
8105435523 / |
|||
|
9353563489 |
|||||
|
|
|
Chethana Prakash Hoskeri |
9591462316 / |
||
|
7349092680 |
|||||
|
|
|
Mallikarjun |
9008184698 |
||
5 |
Belagavi |
16 |
ri Mahadevappa M Nyamagoudar |
9449011295 |
||
|
|
Sri Sunil mole |
9743437030 |
|||
|
|
|
Chaya Gopal yadawad |
8660857653 |
||
|
|
|
Mahesh Mathad |
9844038670 |
||
|
|
|
Poornima. Odarale |
7338047277 |
||
|
|
|
RENUKA PATIL |
8971320893 |
||
|
|
|
Sameer Peerasaheb Lokapur |
9481984120 |
||
|
|
|
Shweta Kotagi |
9742143544 |
||
|
|
|
Shweta Tattimani |
8722828381 |
||
|
|
|
Umesh Yaragatti |
9483738562 |
||
|
|
|
Vinod |
9731418069 |
|
|
|
Chandrakanth V Maradi |
9739940675 |
|
|
|
|
Govindaraddi Jayannavar |
7760459396 |
|
|
|
|
Laxmi kadammanavar |
7259446267 |
|
|
|
|
Praveen Kottalagi |
8073186007 |
|
|
|
|
Supriya p kottalagi |
9108095142 |
|
6 |
Bidar |
2 |
Premdas |
7204607091 |
|
|
|
|
Nitesh Molkeri |
7760960670 |
|
7 |
Chamarajanagar |
3 |
SRINATH RAO, |
9845793411 |
|
|
|
|
Mahesh |
636317011 |
|
|
|
|
Manoj.N |
9916849652 |
|
8 |
Chikkamagalur |
2 |
Roshan |
9110646735 |
|
|
|
|
Sri. S.B. Ramachandrappa |
9164924609 |
|
9 |
Chikkaballapura |
2 |
Naveen Kumar D R , |
9449940832 |
|
|
|
|
C R Nagaraj |
9481487797 |
|
10 |
Chitradurga |
3 |
Rajanna |
9980380195 |
|
|
|
|
Amrutha |
9880075603 |
|
|
|
|
Mohan |
9035933941 |
|
11 |
Dakshina Kannada |
5 |
Shri Sankappa Shetty Adyar |
9686695679 |
|
|
|
|
N Satish Maben |
8660293638 |
|
|
|
|
Akash Natekar |
7259577967 |
|
|
|
|
Ahmed Abdul Fazal |
9448549130 |
|
|
|
|
Anusha M |
7736276374 |
|
12 |
Davanagere |
3 |
Basavaraja K.D |
8105081703 |
|
|
|
|
Chandrasekhara S K |
8925996600 |
|
|
|
|
VANITHA CHANDRASHEKAR |
7022212340 |
|
13 |
Dharwad |
7 |
K.F.UDHOJI |
9035774929 |
|
|
|
|
Priya Kivadasannavar |
9060202709 |
|
|
|
|
Goura Suragimath |
7676234667 |
|
|
|
|
Somashekhar pujar |
9110475286 |
|
|
|
|
Vittal B Suryavanshi |
9880640615 |
|
|
|
|
Banderao Patwari |
879417276199 |
|
|
|
|
Shri. Gopalkrishna.Nayak |
9448358676 |
|
14 |
Gadag |
2 |
Srinivas rathod |
9686641134 |
|
|
|
|
Rudrappa Elalli |
9480100264 |
|
|
|
|
S.V.Galgi |
9663579897 |
15 |
Hassan |
3 |
Pradeep |
|
|
|
|
|
Manjula S C |
|
|
|
|
|
Shravan Kumar P V |
|
|
16 |
Haveri |
4 |
Hiremat soumya |
9538015696 |
|
|
|
|
Sandhya s |
|
|
|
|
|
Veeresh |
|
|
|
|
|
Sangeetha |
|
|
17 |
Kodagu |
2 |
Puttaswamy |
|
|
|
|
|
Neeraj |
|
|
18 |
Kolar |
2 |
Somshekhar KR |
|
|
|
|
|
Vidyashree |
|
|
19 |
Kalaburgi |
3 |
|||
|
|
|
Sharankumar Tallalli |
|
|
|
|
|
Santoshkumar Javali |
|
|
|
|
|
Sharanagouda |
|
|
20 |
Koppal |
2 |
M.Shivalingamurthy |
|
|
|
|
|
Vamanamurthy |
|
|
21 |
Mandya |
4 |
Mahesh Chandra Guru |
|
|
|
|
|
Gavaskar A S |
|
|
|
|
|
Kiran S |
|
|
|
|
|
Ashwin Kuamr |
|
|
22 |
Mysore |
4 |
Dr.Vibhakar |
|
|
|
|
|
Ramesh |
|
|
|
|
|
Veena Bhat |
|
|
|
|
|
Sri Jagadeesh Kganchinamath, |
|
|
23 |
Ramanagara |
5 |
Abhishek |
|
|
|
|
Shivashankar. B |
|
||
|
|
|
Ranjith kumar s |
|
|
|
|
|
Prakash C |
9611161385 |
|
|
|
|
Sujay R K |
9845968372 |
24 |
Raichur |
2 |
Asadulla |
9845157589 |
|
|
|
|
Prakash G |
9986740765 |
|
25 |
Shivamogga |
6 |
Laxminarayana, TJ |
9448786634 |
|
|
|
|
Jayaram Bhat |
9448218871 |
|
|
|
|
Swetha |
8861413537 |
|
|
|
|
Itigi.Shivaputhrappa |
9343312000 |
|
|
|
|
Yashwant Patel M P |
7676895692 |
|
|
|
|
Vanishree Sagar |
8431304790 |
|
26 |
Tumkuru |
3 |
Gowtham, |
9448752379 |
|
|
|
|
Praneeth.G.S., |
9902856987 |
|
|
|
|
Jyothi P M |
9740209538 |
|
27 |
Udupi |
2 |
Suraj Shetty |
9019075051 |
|
|
|
|
Niteesh |
9591143173 |
|
28 |
Uttara Kannada |
1 |
Sujay Bhat, |
9482287323 |
|
29 |
Vijayapura |
3 |
Mahadev S.Ambali |
9880247148 |
|
|
|
|
Smt. Shailaja Basavaraj Sthavarmath |
9972435327 |
|
|
|
|
Siddappa Pujari |
7019268550 |
|
30 |
Vijayanagara |
1 |
Lakshman Shetty M |
8970880012 |
|
31 |
Yadagiri |
3 |
Md. Hassan Mulla |
9742907573 |
|
|
|
|
Balraj |
9632328213 |
|
|
|
|
Santhosh Javalli |
9241333555 |
|
|
Total |
115 |
|
ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.
ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.
ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು" ಮೇಲೆ ಕ್ಲಿಕ್ ಮಾಡಿ
ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 2019ರಲ್ಲಿ ಪ್ರಾರಂಭವಾಗಿದೆ.17ನೇ ಕಂತು ಜೂನ್ನಲ್ಲಿ ರಿಲೀಸ್ ಆಗಿತ್ತು. 16ನೇ ಕಂತು ಫೆಬ್ರವರಿಯಲ್ಲಿ ಬಿಡುಗಡೆಯಾಗಿತ್ತು.
3 ಕಂತುಗಳಲ್ಲಿ ಪಾವತಿ
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈಗ ಈ ವರ್ಷದ 2ನೇ ಕಂತು ಅಗಸ್ಟ್-ನವೆಂಬರ್ ನಡುವೆ ಬರಲಿದೆ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
ಈ ಮೊದಲು ಆಧಾರ್ಗೆ ಸಂಬಂಧಿತ ಮಾಹಿತಿ ಅಪ್ಲೋಡ್ ಮಾಡಿಕೊಳ್ಳಲು ಈ ಮೊದಲು ಸೆಪ್ಟೆಂಬರ್ 14 ಕೊನೆಯ ದಿನವಾಗಿತ್ತು, ಈಗ ಡಿಸೆಂಬರ್ 14ರವರೆಗೆ ಅವಧಿ ವಿಸ್ತರಿಸಲಾಗಿದ್ದು,ಆನ್ಲೈನ್ನಲ್ಲಿ ಉಚಿತವಾಗಿ ಆಧಾರ್ ಅಪ್ಡೇಟ್ ಮಾಡಿಕೊಳ್ಳಿ
ನೀವು ಆಧಾರ್ ಸಂಖ್ಯೆ ಪಡೆದು ಹತ್ತು ವರ್ಷಗಳಾಗಿದ್ದಲ್ಲಿ ಹಾಗೂ ಇದುವರೆಗೂ ಯಾವುದೇ ಮಾಹಿತಿ ಅಪ್ಡೇಟ್ ಮಾಡಿಕೊಂಡಿರದಿದ್ದಲ್ಲಿ ಈ ಅವಕಾಶವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಅಂದಹಾಗೆ ಇದು ಡೆಮೊಗ್ರಫಿಕ್ ಡೇಟಾಗಷ್ಟೇ ಸೀಮಿತವಾಗಿರಲಿದೆ ಎಂದು ಯುಐಡಿಎಐ ತಿಳಿಸಿದೆ.
ಈ ಅಪ್ಡೇಟ್ಗೆ ಆಧಾರ್ ಗ್ರಾಹಕ ಸೇವಾ ಕೇಂದ್ರದಲ್ಲಿ 50 ರೂ. ಶುಲ್ಕ ವಿಧಿಸಲಾಗುತ್ತಿದೆ. ಆದರೆ ಆನ್ಲೈನ್ನಲ್ಲಿ ಉಚಿತವಾಗಿ ಮಾಡಿಕೊಳ್ಳಲು ಅವಕಾಶವಿದ್ದು,ಹತ್ತು ವರ್ಷಗಳ ಹಿಂದೆ ಆಧಾರ್ ಪಡೆದವರು ತಮ್ಮ ಇತ್ತೀಚಿಗಿನ ಗುರುತು, ವಾಸದ ವಿಳಾಸ ಇತ್ಯಾದಿ ಮಾಹಿತಿಗಳನ್ನು ಡಿಸೆಂಬರ್ 14ರ ಒಳಗೆ ಉಚಿತವಾಗಿ ಅಪ್ಡೇಟ್ ಮಾಡಿಕೊಳ್ಳಬಹುದು.
ಅಲ್ಲದೆ ಡೆಮೊಗ್ರಫಿಕ್ ಡೇಟಾ ಅಂದರೆ, ಹೆಸರು, ವಿಳಾಸ, ಜನ್ಮದಿನಾಂಕ, ಲಿಂಗ, ಮೊಬೈಲ್ಫೋನ್ ನಂಬರ್, ಇ-ಮೇಲ್ ಐಡಿ ವಿವರಗಳನ್ನು ಅಪ್ಡೇಟ್ ಮಾಡಿಕೊಳ್ಳಬಹುದು.
Free Aadhaar update-ಉಚಿತವಾಗಿ ಆಧಾರ್ ಅಪ್ಡೇಟ್ ಮಾಡುವ ಡೈರೆಕ್ಟ್ ಲಿಂಕ್
https://myaadhaar.uidai.gov.in/
ಮೊದಲು ಮುಖಪುಟದಲ್ಲಿರುವ login ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,Captcha type ಮಾಡಿ, send OTP ಮೇಲೆ ಕ್ಲಿಕ್ ಮಾಡಿ
ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Login ಮೇಲೆ ಕ್ಲಿಕ್ ಮಾಡಿ
ನಂತರ Document update ಮೇಲೆ ಕ್ಲಿಕ್ ಮಾಡಿ
ನಂತರ Next ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ Next ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ Next ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ POI ಅಂದರೆ ನಿಮ್ಮ ಗುರುತಿನ ಚೀಟಿಯಾಗಿ ಪ್ಯಾನ್ ಕಾರ್ಡ್ ಅಥವಾ ಯಾವುದಾದರು ಗುರುತಿನ ಚೀಟಿಯನ್ನು ಹಾಗೂ POA ಅಂದರೆ ನಿಮ್ಮ ವಿಳಾಸದ ಪುರಾವೆಯನ್ನು select ಮಾಡಿ ನಿಮ್ಮ passport ಅಥವಾ ಯಾವುದಾದರೂ ವಿಳಾಸದ ಪುರಾವೆಯ ಫೋಟೊವನ್ನು ಅಪ್ಲೋಡ್ ಮಾಡಿ,Next ಮೇಲೆ ಕ್ಲಿಕ್ ಮಾಡಿ
ಸೂಚನೆ:ನೀವು ಅಪ್ಲೋಡ್ ಮಾಡುವ ಫೋಟೊ 2MB ಗಿಂತ ಮೇಲೆ ಇರಬೇಕು.
ನಂತರ Okay ಮೇಲೆ ಕ್ಲಿಕ್ ಮಾಡಿ
ನಂತರ submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ಅಪ್ಡೇಟ್ ಆಗಿ,Success ಎಂದು ತೋರಿಸುತ್ತದೆ.
ನಂತರ Download acknowledgment ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮಗೆ Acknowledgment ದೊರೆಯುತ್ತದೆ
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ 12, 13, ಮತ್ತು 25, 26 ರಂದು ಆಧುನಿಕ ಹೈನುಗಾರಿಕೆ ಸೆ. 17 ಮತ್ತು 18 ರಂದು ಕೋಳಿ ಸಾಕಾಣಿಕೆ, ಸೆ.
20 ಮತ್ತು 21 ರಂದು ಕುರಿ ಮೇಕೆ ಸಾಕಾಣಿಕೆ, ಹಾಗೂ ತರಬೇತಿಯನ್ನು ಆಯೋಜಿಸಲಾಗಿದೆ.
ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ತರಬೇತಿಯಲ್ಲಿ ಯಾವುದೇ ಪೆತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದೂ. 08192-233787 ಗೆ ಸಂಪರ್ಕಿಸಬಹುದೆಂದು ಮುಖ್ಯ ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
Free dairy and vermicompost training-ಉಚಿತ ಊಟ ವಸತಿಯೊಂದಿಗೆ 10 ದಿನಗಳ ಹೈನುಗಾರಿಕೆ,ಎರೆಹುಳು ಗೊಬ್ಬರ ತಯಾರಿಕೆ ತರಬೇತಿ-Uchitha hainugarike tharabethi
ಬ್ಯಾಂಕ್ ಆಫ್ ಬರೋಡ ಸ್ವ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ18 - 45 ವಯೋಮಾನದವರಿಗೆ *ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ* (free dairy and Vermicompost training) ತರಬೇತಿಯನ್ನು ದಿನಾಂಕ *14.10.2024 ರಿಂದ 23.10.2024* ವರೆಗೆ 10 ದಿನಗಳ ಕಾಲ ಆಯೋಜಿಸಲಾಗಿದೆ.
ತರಬೇತಿಯಲ್ಲಿ ಕಲಿಸುವ ವಿಷಯಗಳು::
1. ಹೈನುರಾಸುಗಳ ತಳಿಗಳು (Dairy breeds)
2. ರೋಗಗಳು ಮತ್ತು ಅದರ ಲಕ್ಷಣಗಳು(Disease and their symptoms)
3. ರೋಗಗಳನ್ನು ತಡೆಗಟ್ಟುವ ಕ್ರಮಗಳು(controlling measures)
4. ಕೃತಕ ಗರ್ಭಧಾರಣೆ (Artificial Insemination)
5. ಮೇವಿನ ವಿಷಯಗಳು(Fodder)
6. ಎರೆಹುಳು ಗೊಬ್ಬರ ತಯಾರಿಕೆ (Vermicompost)
7. ಎರೆಹುಳು ನಿರ್ವಹಣೆ(Vermicompost management)
8. ಸಾವಯುವ ಕೃಷಿ ಪದ್ಧತಿಯ ಅರಿವು (Importantance of organic farming)
9. ಸಮಯದ ನಿರ್ವಹಣೆ, ಸ್ವ ಉದ್ಯೋಗದ ಮಹತ್ವ, ಸಂವಹನ ಕೌಶಲ್ಯ, ಬ್ಯಾಂಕಿಂಗ್ ವಿಷಯ ಮತ್ತು ಇನ್ನೂ ಇತರೆ ವಿಷಯಗಳ ಬಗ್ಗೆ ತಿಳುವಳಿಕೆ ನೀಡಲಾಗುವುದು.(Bank and subsidy schemes)
*ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ.*
ಹೆಸರನ್ನು ನಮೂದಿಸಲು
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://kswdcl.karnataka.gov.in/info-2/Scientific+Sheep+Rearing+Training/kn
]]>
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನ
ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ.
• ಘಟಕ ವೆಚ್ಚ : ₹1 ಲಕ್ಷ
• ಸಹಾಯಧನ : ₹50,000
ಸಾಲ : ₹50,000 (ಶೇ.4 ರಷ್ಟು ಬಡ್ಡಿದರ)
ಪರಿಶಿಷ್ಟ ಜಾತಿ ಮಾದಿಗ ಮತ್ತು ಸಂಬಂದಿತ ಜಾತಿಗೆ ಸೇರಿದ ನಿರುದ್ಯೋಗಿಗಳು ಕೈಗಾಡಿಗಳನ್ನು ಖರೀದಿಸಿ ಹಾಗೂ ರೈತರಿಂದ ತರಕಾರಿ, ಹಣ್ಣುಗಳನ್ನು ಖರೀದಿ ಮಾಡಿ ತಳ್ಳುವ ಗಾಡಿ ಮೂಲಕ ಮಾರಾಟ ಮಾಡಿ ಸ್ವಯಂ ಉದ್ಯೋಗ ಕೈಗೊಂಡು ಆದಾಯಗಳಿಸಲು ಅವಶ್ಯವಿರುವ ಸಾಲ ಮತ್ತು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://adijambava.karnataka.gov.in/4/self-employment-direct-loan-scheme:/kn
]]>ಸ್ವಾವಲಂಬಿ ಸಾರಥಿ ಯೋಜನೆ
ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.
ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು
ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.
ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.
ಡ್ರೈವಿಂಗ್ ಲೈಸೆನ್ಸ್
ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.
ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಹಿಂದುಳಿದ ವರ್ಗದವರಾಗಿರಬೇಕು.
ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ
(DL) ಡ್ರೈವಿಂಗ್ ಲೈಸೆನ್ಸ್
ಫೋಟೋ
ಮೊಬೈಲ್ ನಂಬರ್
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಿ ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 15 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು.
75% ಸಬ್ಸಿಡಿಯಲ್ಲಿ ಸರಕು ವಾಹನ, ಕಾರು ಖರೀದಿಗೆ 4 ಲಕ್ಷ ರೂಪಾಯಿ ಸಹಾಯಧನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Car subsidy scheme
ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನ
ಉದ್ದೇಶಗಳು:
• ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಈ ಕೆಳಕಂಡ೦ತೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.
• ಬ್ಯಾಂಕ್ ಸಾಲದ ಶೇ.20ರಷ್ಟು ಸಹಾಯಧನ ಅಥವಾ ಗರಿಷ್ಠ ₹1 ಲಕ್ಷ
• ಘಟಕ ವೆಚ್ಚದ ಶೇ.70ರಷ್ಟು ಸಹಾಯಧನ ಅಥವಾ ಗರಿಷ್ಠ ₹2 ಲಕ್ಷ
ಸ್ವಾವಲಂಬಿ ಸಾರಥಿ
ಸರಕು ವಾಹನ / ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ. ಸಾಲದ ಮೊತ್ತದ ಶೇ.75ರಷ್ಟು ಸಹಾಯಧನ ಅಥವಾ ಗರಿಷ್ಠ 74 ಲಕ್ಷ
ಈ ಯೋಜನೆಯಡಿ ಪರಿಶಿಷ್ಟ ಪಂಗಡದ ಭೂ ರಹಿತ ಮಹಿಳಾಕೃಷಿ ಕಾರ್ಮಿಕರನ್ನು ಭೂ ಒಡೆಯರನ್ನಾಗಿ ಮಾಡುವ ಉದ್ದೇಶ ಹೊಂದಲಾಗಿರುತ್ತದೆ. ಖರೀದಿಸುವ ಜಮೀನು ಫಲಾಪೇಕ್ಷಿಯ ವಾಸಿಸುವ ಸ್ಧಳದಿಂದ 10 ಕಿಮೀ ವ್ಯಾಪ್ತಿಯಲ್ಲಿರಬೇಕು. ಘಟಕ ವೆಚ್ಚದ ಮಿತಿಯೊಳಗೆ ಕನಿಷ್ಟ 2.00 ಎಕರೆ ಖುಷ್ಕಿ, 1.00 ಎಕರೆ ನೀರಾವರಿ, 1/2 ಎಕರೆ ಭಾಗಾಯ್ತು ಖರೀದಿಸಿ ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕರ ಹೆಸರಿನಲ್ಲಿ ನೊಂದಾಯಿಸಲಾಗುವುದು.
ಈ ಯೋಜನೆಯಡಿ ಪ್ರಸ್ತಾವನೆ ಸಲ್ಲಿಸಿ ಮಂಜೂರಾತಿಯನ್ನು ನೀಡುವ ಅಧಿಕಾರವನ್ನು ಆಯಾ ಜಿಲ್ಲೆಯಲ್ಲಿನ ಜಿಲ್ಲಾಧಿಕಾರಿಗಳಿಗೆ ನೀಡಲಾಗಿರುತ್ತದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸೀಮಿತಗೊಂಡಂತೆ ಈ ಯೋಜನೆಯಡಿ ಘಟಕ ವೆಚ್ಚವನ್ನು ರೂ.25.00 ಲಕ್ಷಗಳು ಮತ್ತು ಉಳಿದ 26 ಜಿಲ್ಲೆಗಳಲ್ಲಿ ಘಟಕ ವೆಚ್ಚವನ್ನು ರೂ.20.00 ಲಕ್ಷಗಳಿಗೆ ನಿಗದಿಪಡಿಸಲಾಗಿರುತ್ತದೆ. ಒಟ್ಟು ಘಟಕ ವೆಚ್ಚದಲ್ಲಿ ಶೇ.50 ರಷ್ಟು ಸಹಾಯಧನ ಮತ್ತು ಶೇ.50 ರಷ್ಟು ಅವಧಿಸಾಲವಾಗಿರುತ್ತದೆ.
ಅವಧಿಸಾಲವನ್ನು ನಿಗಮದಿಂದಲೇ ಭರಿಸಲಾಗುತ್ತದೆ. ಇದಕ್ಕೆ ವಾರ್ಷಿಕ ಶೇ.6ರ ದರದಲ್ಲಿ ಬಡ್ಡಿ ವಿಧಿಸಲಾಗುತ್ತದೆ. ಸಾಲ ಮತ್ತು ಬಡ್ಡಿಯನ್ನು 10 ವರ್ಷಗಳ ಅವಧಿಯಲ್ಲಿ ವಾರ್ಷಿಕ ಸಮ ಕಂತುಗಳಲ್ಲಿ ಮರುಪಾವತಿ ಮಾಡಬೇಕಾಗಿರುತ್ತದೆ. ಜಮೀನು ಮಾರಾಟ ಮಾಡುವ ಭೂ ಮಾಲೀಕರು ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬಾರದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಸಮಿತಿಯು ಜಮೀನಿನ ದರವನ್ನು ನಿಗದಿಪಡಿಸುತ್ತದೆ.
ಡಾ| ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಭೂ ಒಡೆತನ ಯೋಜನೆಯು ಪರಿಶಿಷ್ಟ ಜಾತಿ- ಪಂಗಡ ನಿಗಮದ ಪ್ರತಿಷ್ಠಿತ ಯೋಜನೆಯಾಗಿದೆ. ಈ ಯೋಜನೆಯಡಿ ಭೂ ರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಭೂಮಿಯನ್ನು ಖರೀದಿಸಿ ಶೇ.50 ಸಹಾಯಧನದೊಂದಿಗೆ ನೀಡಲಾಗುವುದು. ಆದಿಕರ್ನಾಟಕ, ಆದಿ ದ್ರಾವಿಡ ಸಹಿತ ಇತರ ಉಪಜಾತಿಗೆ ಸೇರಿರುವ ಅರ್ಹರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
ಪ್ರತೀ ವರ್ಷ ಎಪ್ರಿಲ್ ಬಳಿಕ ಅರ್ಜಿಗಳನ್ನು ಆಹ್ವಾನಿಸಲಾಗುವುದು. ನಿಗದಿತ ಅವಧಿಯಲ್ಲಿ ಕಡ್ಡಾಯವಾಗಿ ಆನ್ಲೈನ್ ಸುವಿಧ ವೆಬ್ಸೈಟ್ ಅಥವಾ ಆ್ಯಪ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗೆ ಬೇಕಾಗುವ ದಾಖಲೆ ಏನು?
1. ಅರ್ಜಿದಾರರ ಭಾವಚಿತ್ರ(Photo)
2. ಜಾತಿ- ಆದಾಯ ಪ್ರಮಾಣ ಪತ್ರ(Caste certificate)
3. ಪಡಿತರ ಚೀಟಿ/ ಮತದಾರರ ಗುರುತಿನ ಚೀಟಿ/ ಆಧಾರ್ ಕಾರ್ಡ್ ಪ್ರತಿ(Aadhaar)
4. ಯೋಜನಾ ವರದಿ/ ದರ ಪಟ್ಟಿ(Detail project report)
ಯೋಜನೆ ಜಾರಿಗೊಳಿಸಿರುವ ನಿಗಮಗಳು
1.ಅಂಬೇಡ್ಕರ್ ಅಭಿವೃದ್ಧಿ ನಿಗಮ
2. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ
ಯಾರ್ಯಾರು ಅರ್ಹರು?
ಪರಿಶಿಷ್ಟ ಜಾತಿ-ಪಂಗಡ ಸಮುದಾಯದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರು ಆಗಿರಬೇಕು(ಕಳೆದ 15 ವರ್ಷದಿಂದ ರಾಜ್ಯದ ನಿವಾಸಿ ಆಗಿರಬೇಕು).
ಈ ಯೋಜನೆಗೆ ಜಮೀನು ಮಾರಾಟ ಮಾಡುವ ಭೂ ಮಾಲಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರಬಾರದು.
8 ವರ್ಷದಿಂದ 50 ವರ್ಷ ವಯೋಮಿತಿ ಹೊಂದಿರಬೇಕು.
ಕುಟುಂಬದ ಯಾವುದೇ ಸದಸ್ಯರು ಸರಕಾರಿ/ ಅರೆ ಸರಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿ ಇರಬಾರದು.
ಈ ಹಿಂದೆ ಕುಟುಂಬದವರು ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು.
ಅರ್ಜಿದಾರರ ವಾರ್ಷಿಕ ವರಮಾನ ಗ್ರಾಮೀಣ ಭಾಗಕ್ಕೆ 1.5 ಲಕ್ಷ ರೂ. ಹಾಗೂ ನಗರ ನಿವಾಸಿಗಳಿಗೆ 2 ಲಕ್ಷ ರೂ. ಮಿತಿಯಲ್ಲಿರಬೇಕು.
ಸಿಗುವ ಸೌಲಭ್ಯ
ಈ ಯೋಜನೆಯಡಿ ಭೂ ರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಘಟಕ ವೆಚ್ಚ 15 ಲಕ್ಷ ರೂ.ಗಳಲ್ಲಿ ಲಭ್ಯವಾಗುವಷ್ಟು ಖುಷ್ಕಿ ಅಥವಾ ತರಿ/ ಭಾಗಾಯ್ತು ಜಮೀನನ್ನು ಖರೀದಿಸಿ ನೀಡಲಾಗುತ್ತದೆ. (ಬೆಂಗಳೂರು ನಗರ, ಬೆಂ. ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಘಟಕದ ವೆಚ್ಚ 20 ಲಕ್ಷ ರೂ. ಆಗಿದೆ.) ಇದರಲ್ಲಿ ಶೇ.50ರಷ್ಟು ಸಹಾಯಧನ ಸಿಗುತ್ತದೆ. ಉಳಿದ ಶೇ.50 ಸಾಲವಾಗಿರುತ್ತದೆ. ಈ ಸಾಲವನ್ನು 10 ವಾರ್ಷಿಕ ಸಮ ಕಂತುಗಳಲ್ಲಿ ಶೇ.6ರ ಬಡ್ಡಿದರದಲ್ಲಿ ಮರು ಪಾವತಿ ಮಾಡಬೇಕಿದೆ. ಫಲಾನುಭವಿಯು ವಾಸಿಸುವ ಸ್ಥಳದಿಂದ ಗರಿಷ್ಠ 10 ಕಿ.ಮೀ.ವ್ಯಾಪ್ತಿಯೊಳಗೆ ಜಮೀನನ್ನು ಖರೀದಿಸಿ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://kmvstdcl.karnataka.gov.in/info-2/Land+Purchase+Scheme/kn
]]>
ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ(Sheep), ಮೇಕೆ(goat), ಹಂದಿ ಸಾಕಾಣಿಕೆ ಮತ್ತು ರಸಮೇವು(Silage) ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.
National livestock mission
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ
(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)
ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.
ಅವಶ್ಯಕ ದಾಖಲಾತಿಗಳು :-
1)ಆಧಾರ,
2)ಪಹಣಿ ಪತ್ರ
3)ಬ್ಯಾಂಕ್ಖಾತೆ ಸಂಖ್ಯೆ,
ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು
4)ಭಾವ ಚಿತ್ರ.
ಕ್ರ.ಸಂ |
ಘಟಕ |
ಸೌಲಭ್ಯಗಳ ವಿವರ |
|
ಹೈನುಗಾರಿಕೆ |
|
1 |
ಮಿಶ್ರತಳಿ ದನಗಳ ನಿರ್ವಹಣೆ (1+1) |
ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ |
|
ಆ. ಸುಧಾರಿತ ಎಮ್ಮೆಗಳ ನಿರ್ವಹಣೆ |
ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ |
|
ಕುರಿ ಸಾಕಾಣಿಕೆ |
|
2 |
ಕುರಿಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ |
|
ಕುರಿಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (10) |
ರೂ. 13,000 ರಂತೆ ಸಾಲ ಸೌಲಭ್ಯ |
|
ಟಗರುಗಳ ನಿರ್ವಹಣೆ (20) |
ರೂ. 26,000 ರಂತೆ ಸಾಲ ಸೌಲಭ್ಯ |
|
ಮೇಕೆ ಸಾಕಾಣಿಕೆ |
|
3 |
ಮೇಕೆಗಳ ನಿರ್ವಹಣೆ (10+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ |
|
ಮೇಕೆಗಳ ನಿರ್ವಹಣೆ (20+01) |
ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ |
4 |
ಹಂದಿ ಸಾಕಾಣಿಕೆ (10) |
ರೂ,60,000 ರಂತೆ ಸಾಲ ಸೌಲಭ್ಯ |
|
ಕೋಳಿ ಸಾಕಾಣಿಕೆ |
|
5 |
ಮಾಂಸದ ಕೋಳಿ ಸಾಕಾಣಿಕೆ |
2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ |
|
ಮೊಟ್ಟೆ ಕೋಳಿ ಸಾಕಾಣಿಕೆ |
1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ |
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.
Vetarnary department subsidy schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ಲಸಿಕಾ ಕಾರ್ಯಕ್ರಮ(Vaccination program)
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ(Back yard poultry)
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>
ರಾಷ್ಟ್ರೀಯ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ; ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ; ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಶೇಕಡಾ 90% ರಷ್ಟು ಸಹಾಯಧನ (2 ಹೇಕ್ಟರ್ರವರೆಗೆ ಶೇಕಡಾ 90%) ಸಹಾಯಧನ.ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಣ್ಣ, ಅತಿಸಣ್ಣ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಅಡಿಕೆ ಹೊರತುಪಡಿಸಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮಥ್ರ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಕೃಷಿಹೊಂಡ, ಪ್ಯಾಕ್ಹೌಸ್, ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ
https://horticulturedir.karnataka.gov.in/info-2/Facilities+available+to+farmers/kn
ವಿವಿಧ ಯೋಜನೆಗಳು:
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ:
ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೆÇೀಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:
ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಯಾಕ್ಹೌಸ್ ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ:
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.75 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.
ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ:
ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಮತ್ತು ಬೈಯೋಡೈಜಿಸ್ಟರ್ ಮತ್ತು ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಸಹ ಅರ್ಜಿ ಆಹ್ವಾನಿಸಲಾಗಿದೆ.
ಮೇಲ್ಕಂಡ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಲಾಗಿದೆ. ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.
]]>
ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆಗೆ(PMKMY) ಜಾರ್ಖಂಡ್ನ ರಾಂಚಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಇದು ಕೇಂದ್ರ ವಲಯದ ಯೋಜನೆಯಾಗಿದ್ದು, ಇದು ಸಹಕಾರ ಮತ್ತು ರೈತರ ಕಲ್ಯಾಣ, ಕೃಷಿ ಇಲಾಖೆ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಮತ್ತು ಭಾರತ ಸರ್ಕಾರವು ಭಾರತೀಯ ಜೀವ ವಿಮಾ ನಿಗಮದ (LIC) ಸಹಭಾಗಿತ್ವದಲ್ಲಿ ನಿರ್ವಹಿಸುತ್ತದೆ.
ಎಲ್ಐಸಿ ಪಿಎಂ ಕಿಸಾನ್ ಮಾನ್-ಧನ್ ಯೋಜನೆಗೆ(Pradan mantri kisan mandhan yojane) ಪಿಂಚಣಿ ನಿಧಿ ನಿರ್ವಾಹಕರಾಗಿದ್ದು, ಇದು ರೂ.ಗಳ ಖಚಿತವಾದ ಮಾಸಿಕ ಪಿಂಚಣಿಯನ್ನು ಒದಗಿಸುತ್ತದೆ. 3000/- ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ( 2 ಹೆಕ್ಟೇರ್ ವರೆಗೆ ಸಾಗುವಳಿ ಭೂಮಿಯನ್ನು ಹೊಂದಿರುವವರು ) 60 ವರ್ಷ ವಯಸ್ಸಿನ ನಂತರ . ಭಾರತದಲ್ಲಿನ ಸಣ್ಣ ಮತ್ತು ಅತಿ ಸಣ್ಣ ರೈತರ ಜೀವನವನ್ನು ಸುರಕ್ಷಿತಗೊಳಿಸುವ ಉದ್ದೇಶದಿಂದ ಈ ಯೋಜನೆಯನ್ನು ಪರಿಚಯಿಸಲಾಗಿದೆ.
ಭಾರತದಲ್ಲಿ PM-KMY ಯೋಜನೆಯು 18 ರಿಂದ 40 ವರ್ಷ ವಯಸ್ಸಿನ ರೈತರಿಗೆ ಕೇಂದ್ರ ವಲಯದ ಯೋಜನೆಯಾಗಿದೆ . ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ನಿರ್ವಹಿಸುವ ಪಿಂಚಣಿ ನಿಧಿಯ ಅಡಿಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಫಲಾನುಭವಿಯು PM-KMY ಯೋಜನೆಯ ಸದಸ್ಯರಾಗಬಹುದು. ಹೀಗೆ ಸದಸ್ಯರು ತಮ್ಮ ವಯಸ್ಸಿಗೆ ಅನುಗುಣವಾಗಿ ಕೇಂದ್ರ ಸರ್ಕಾರದಿಂದ ಸಮಾನ ಕೊಡುಗೆಯನ್ನು ಒದಗಿಸುವುದರೊಂದಿಗೆ ಪಿಂಚಣಿ ನಿಧಿಗೆ ರೂ.55/- ರಿಂದ ರೂ.200/- ರ ನಡುವೆ ಮಾಸಿಕ ಕೊಡುಗೆಯನ್ನು ನೀಡಬೇಕಾಗುತ್ತದೆ. ನವೆಂಬರ್ 14, 2019 ರ ವರದಿಗಳ ಪ್ರಕಾರ, ಭಾರತದಲ್ಲಿ ಒಟ್ಟು 18,29,469 ರೈತರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಈ ಯೋಜನೆಯು ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನ್ವಯಿಸುತ್ತದೆ . ಈ ಯೋಜನೆಯ ಅಡಿಯಲ್ಲಿ ಅವರು ಮತ್ತು ಕೇಂದ್ರ ಸರ್ಕಾರದಿಂದ ನೀಡಬೇಕಾದ ಕೊಡುಗೆಯ ಅನುಪಾತವು 1:1 ಆಗಿದೆ. PM-KMY ಯೋಜನೆಯಡಿ ಸರ್ಕಾರದ ಕೊಡುಗೆಯು ರೈತರು ನೀಡುವ ಮಾಸಿಕ ಕೊಡುಗೆಗೆ ಸಮಾನವಾಗಿರುತ್ತದೆ.
ಸಂಬಂಧಿತ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಭೂ ದಾಖಲೆಗಳ ಪ್ರಕಾರ ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರು ( 2 ಹೆಕ್ಟೇರ್ಗಳವರೆಗೆ ಸಾಗುವಳಿ ಭೂಮಿಯನ್ನು ಹೊಂದಿದ್ದಾರೆ ) ಮತ್ತು 18 ವರ್ಷದಿಂದ 40 ವರ್ಷ ವಯಸ್ಸಿನವರು ಪ್ರಧಾನ ಮಂತ್ರಿ ಕಿಸಾನ್ ಮಾನ್-ಧನ್ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಮತ್ತು ಈ ಯೋಜನೆಯ ಎಲ್ಲಾ ಪ್ರಯೋಜನಗಳನ್ನು ಪಡೆಯಬಹುದು.
ಹೊರಗಿಡುವ ಮಾನದಂಡದ ವ್ಯಾಪ್ತಿಯೊಳಗೆ ಬರುವ ರೈತರು ಪ್ರಯೋಜನಕ್ಕೆ ಅರ್ಹರಲ್ಲ.
ಆದಾಗ್ಯೂ, ಈ ಕೆಳಗಿನ ಮಾನದಂಡಗಳ ಅಡಿಯಲ್ಲಿ ಬರುವ ರೈತರು ಯೋಜನೆಗೆ ಅರ್ಹರಾಗಿರುವುದಿಲ್ಲ :
1.ರಾಷ್ಟ್ರೀಯ ಪಿಂಚಣಿ ಯೋಜನೆ (NPS), ನೌಕರರ ರಾಜ್ಯ ವಿಮಾ ನಿಗಮ ಯೋಜನೆ, ಉದ್ಯೋಗಿಗಳ ನಿಧಿ ಸಂಸ್ಥೆ ಯೋಜನೆ ಇತ್ಯಾದಿಗಳಂತಹ ಇತರ ಯೋಜನೆಗಳ ಅಡಿಯಲ್ಲಿ ಈಗಾಗಲೇ ನೋಂದಾಯಿಸಲ್ಪಟ್ಟಿರುವ ಸಣ್ಣ ಮತ್ತು ಅತಿ ಸಣ್ಣ ರೈತರು PM-KMY ಯೋಜನೆಗೆ ಅರ್ಹರಾಗಿರುವುದಿಲ್ಲ.
2.ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ನಿರ್ವಹಿಸುವ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ (PMSYM) ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಪ್ರಧಾನ ಮಂತ್ರಿ ಲಘು ವ್ಯಾಪಾರಿ ಮಾನ್-ಧನ್ ಯೋಜನೆ (PM-LVM) ಗಾಗಿ ಆಯ್ಕೆ ಮಾಡಿದ ರೈತರು ಸಹ ಅಲ್ಲ ಈ ಯೋಜನೆಗೆ ಅರ್ಹರು.
PM-KMY ಯೋಜನೆಯ ಪ್ರಯೋಜನಗಳು
ಫಲಾನುಭವಿಯೊಂದಿಗೆ, ಸಂಗಾತಿಯು ಸಹ ಯೋಜನೆಗೆ ಅರ್ಹರಾಗಿದ್ದಾರೆ ಮತ್ತು ನಿಧಿಗೆ ಪ್ರತ್ಯೇಕ ಕೊಡುಗೆಗಳನ್ನು ನೀಡುವ ಮೂಲಕ ರೂ.3000/- ಗಳ ಪ್ರತ್ಯೇಕ ಪಿಂಚಣಿ ಪಡೆಯಬಹುದು.
ನಿವೃತ್ತಿಯ ದಿನಾಂಕದ ಮೊದಲು ಫಲಾನುಭವಿಯು ಮರಣಹೊಂದಿದರೆ, ಉಳಿದ ಕೊಡುಗೆಗಳನ್ನು ಪಾವತಿಸುವ ಮೂಲಕ ಸಂಗಾತಿಯು ಈ ಯೋಜನೆಯನ್ನು ಮುಂದುವರಿಸಬಹುದು. ಆದರೆ ಸಂಗಾತಿಯು ಮುಂದುವರಿಯಲು ಬಯಸದಿದ್ದರೆ, ಬಡ್ಡಿಯೊಂದಿಗೆ ರೈತರು ನೀಡಿದ ಒಟ್ಟು ಕೊಡುಗೆಯನ್ನು ಸಂಗಾತಿಗೆ ಪಾವತಿಸಲಾಗುತ್ತದೆ.
ಸಂಗಾತಿಯಿಲ್ಲದಿದ್ದರೆ, ಬಡ್ಡಿಯೊಂದಿಗೆ ಒಟ್ಟು ಕೊಡುಗೆಯನ್ನು ನಾಮಿನಿಗೆ ಪಾವತಿಸಲಾಗುತ್ತದೆ.
ನಿವೃತ್ತಿ ದಿನಾಂಕದ ನಂತರ ರೈತರು ಮರಣಹೊಂದಿದರೆ, ಸಂಗಾತಿಯು ಪಿಂಚಣಿಯ 50% ಅನ್ನು ಕುಟುಂಬ ಪಿಂಚಣಿಯಾಗಿ ಪಡೆಯುತ್ತಾರೆ. ರೈತ ಮತ್ತು ಸಂಗಾತಿಯ ಮರಣದ ನಂತರ, ಸಂಗ್ರಹವಾದ ಕಾರ್ಪಸ್ ಅನ್ನು ಪಿಂಚಣಿ ನಿಧಿಗೆ ಹಿಂತಿರುಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/Documents/PM-KMY%20-%20Salient%20Features.pdf
]]>
ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್(Gram one online application) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಟಾನಗೊಳಿಸುತ್ತಿದ್ದು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.15 ಕಡೆಯ ದಿನವಾಗಿದ್ದು ಆಸಕ್ತಿವುಳ್ಳವರು ಅರ್ಜಿಗಳನ್ನು https://www.karnatakaone.gov.in/Public/GramOneFrachiseeTerms ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು ಹಾಗೂ ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಗ್ರಾಮಓನ್ ನಲ್ಲಿ ಸಿಗುವ ಸೇವೆಗಳು ಹಾಗೂ ಅದಕ್ಕೆ ಬೇಕಾದ ದಾಖಲೆಗಳ ಪಟ್ಟಿಯನ್ನು ಈ ಕೆಳಗಿನ PDF ಮೂಲಕ ಡೌನ್ಲೋಡ್ ಮಾಡಿಕೊಳ್ಳಿ
]]>ರಾಜ್ಯ ಸರ್ಕಾರವು ಸಾಮಾನ್ಯ ಜನರ ಮತ್ತು ಕೂಲಿ ಕಾರ್ಮಿಕರ ಏಳಿಗೆಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಜಾರಿಗೆ ತಂದಿದ್ದಾರೆ.
ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ ವೈಯಕ್ತಿಕ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಯ ಈ ಕೆಳಕಂಡ ವರ್ಗಗಳಲ್ಲಿ ಯಾವುದಾದರೂ ಒಂದು ವರ್ಗದಲ್ಲಿ ಅರ್ಹರಾಗಿರತಕ್ಕದ್ದು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ
ಅಲೆಮಾರಿ ಬುಡಕಟ್ಟುಗಳು
ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು
ಮಹಿಳಾ ಪ್ರಧಾನ ಕುಟುಂಬಗಳು
ವಿಕಲಚೇತನ ಕುಟುಂಬಗಳು
ಭೂ ಸುಧಾರಣಾ ಫಲಾನುಭವಿಗಳು
ವಸತಿ ಯೋಜನೆಗಳ ಫಲಾನುಭವಿಗಳು
ಅರಣ್ಯ ಹಕ್ಕು ಕಾಯಿದೆ 2006ರ ಫಲಾನುಭವಿಗಳು
ಸಣ್ಣ ಮತ್ತು ಅತಿ ಸಣ್ಣ ರೈತರು
ಇದನ್ನೂ ಓದಿ
1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming subsidy scheme Karnataka
https://krushirushi.in/Dairy-farming-subsidy-scheme-karnataka-1428
ಫಲಾನುಭವಿಯು ವೈಯಕ್ತಿಕ ಸೌಲಭ್ಯ ಪಡೆಯಲು
ಫಲಾನುಭವಿಯು ಕಡ್ಡಾಯವಾಗಿ ನರೇಗಾ ಯೋಜನೆಯ ಜಾಬ್ ಕಾರ್ಡ್ ಹೊಂದಿರಬೇಕು
ಫಲಾನುಭವಿಗೆ ನೀಡಲಾದ ವೈಯಕ್ತಿಕ ಕಾಮಗಾರಿಯಲ್ಲಿ ಆತನ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಾದರು ಕೆಲಸ ನಿರ್ವಹಿಸಬೇಕು
ನರೇಗಾ ಯೋಜನೆಯಡಿ ಫಲಾನುಭವಿಕೆ ನೀಡಬಹುದಾದ ವಯಕ್ತಿಕ ಕಾಮಗಾರಿಗಳ ಗರಿಷ್ಠ ಮಟ್ಟದ ಮಿತಿಯನ್ನು 2 ಲಕ್ಷಗಳಿಗೆ ನಿಗದಿಪಡಿಸಿ ಸದರಿ ಗರಿಷ್ಠ ಮೊತ್ತದ ಮಿತಿಯನ್ನು ಹೆಚ್ಚಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗಿರುತ್ತದೆ
ಯೋಜನೆ ಅಡಿ ನೊಂದಾಯಿತವಾದ ಒಂದು ವರ್ಷ ಕುಟುಂಬವು ತನ್ನ ಜೀವಿತಾವಧಿಯಲ್ಲಿ ಗರಿಷ್ಠ ಎರಡು ವರೆ ಲಕ್ಷದ ಗಳವರೆಗೆ ಯೋಜನೆ ಅಡಿ ನೀಡಲಾಗುವ ವೈಯಕ್ತಿಕ ಕಾಮಗಾರಿಗಳನ್ನು ಪಡೆದುಕೊಳ್ಳಬಹುದಾಗಿದೆ
ನರೇಗಾ ಯೋಜನೆಯಡಿ ಕೃಷಿಹೊಂಡ ನಿರ್ಮಾಣ
ನರೇಗಾ ಯೋಜನೆ ಅಡಿ ಅರ್ಹ ಫಲಾನುಭವಿಯು ಯೋಜನೆ ಅಡಿ ನಿರ್ಮಿಸಿಕೊಂಡ ಕೃಷಿಹೊಂಡ ಕಾಮಗಾರಿಯನ್ನು ಮುಂದಿನ ಐದು ವರ್ಷಗಳವರೆಗೆ ಮುಚ್ಚತಕ್ಕದ್ದಲ್ಲ.
ಒಂದು ವೇಳೆ ಫಲಾನುಭವಿಯು ಕೃಷಿ ಹೊಂಡವನ್ನು ಮುಚ್ಚಿದ್ದಲ್ಲಿ ಕೃಷಿಹೊಂಡ ನಿರ್ಮಾಣಕ್ಕಾಗಿ ತಗಲಿದ ವೆಚ್ಚ ಹಾಗೂ ಶೇಕಡ 18ರಷ್ಟು ಬಡ್ಡಿ ಸೇರಿ ಸರ್ಕಾರಕ್ಕೆ ಬರಣ ಮಾಡತಕ್ಕದ್ದು
ಕೃಷಿ ಹೊಂಡ ನಿರ್ಮಾಣ ಕಾಮಗಾರಿಯನ್ನು ಅನುಷ್ಠಾನಗೊಳಿಸುವ ಮುಂಚೆ ಫಲಾನುಭವಿಗಳಿಂದ ಮುಚ್ಚಳಿಕೆ ಪತ್ರವನ್ನು ಕಡ್ಡಾಯವಾಗಿ ಪಡೆಯತಕ್ಕದ್ದು
ಕೃಷಿ ಹೊಂಡ ಕಾಮಗಾರಿಗಳ ಕ್ರಿಯಾಯೋಜನೆಯನ್ನು ಅನುಮೋದನೆಗಾಗಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸುವಾಗ ಮುತ್ತಳಿಕೆ ಪತ್ರದ ಪ್ರತಿಯನ್ನು ಲಗತ್ತಿಸುವುದು
ಕಾಮಗಾರಿಗಳ ಆಯ್ಕೆ ಮಾಡುವಾಗ ತಾಂತ್ರಿಕವಾಗಿ ಸೈಟ್ ಫೀಸಿಬಿಲಿಟಿ ಇರುವುದನ್ನ ಖಚಿತಪಡಿಸಿಕೊಳ್ಳುವುದು
ಕೃಷಿಹೊಂಡ ಕಾಮಗಾರಿಯ ಅನುಮೋದನೆಯಾದ ಆರ್ಥಿಕ ವರ್ಷದಲ್ಲಿಯೇ ಕಡ್ಡಾಯವಾಗಿ ಪೂರ್ಣಗೊಳಿಸುವುದು
ಅನುಷ್ಠಾನಗೊಳಿಸುವಾಗ ಮೂರು ಹಂತದ Geo Tag ಮಾಡುವ ಪ್ರಕ್ರಿಯೆಯನ್ನು ನಿಗದಿ ಅವಧಿಯೊಳಗೆ ಪೂರ್ಣಗೊಳಿಸುವುದು ಕಡ್ಡಾಯವಾಗಿರುತ್ತದೆ
ಕಾಮಗಾರಿ ಸ್ಥಳದಲ್ಲಿ ಕಡ್ಡಾಯವಾಗಿ ಸಿಟಿಜನ್ ಇನ್ಫಾರ್ಮಶನ್ ಬೋರ್ಡ್ ಅಳವಡಿಸತಕ್ಕದ್ದು.
ದನದ ಶೆಡ್ ನಿರ್ಮಾಣಕ್ಕೆ 57,000 ಸಹಾಯಧನ
ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ದನಗಳ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ಯ ಇಲಾಖೆಗಳು ಮೊದಲು ನೀಡುತ್ತಿರುವ ಸಹಾಯಧನವನ್ನು ಹೆಚ್ಚಳ ಮಾಡಿ, ರಾಜ್ಯದ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿಯನ್ನು ನೀಡಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಅಂದರೆ 2022ರ ಸಾಲಿನ ಏಪ್ರಿಲ್ 1 ರಿಂದ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೂಲಿ ಕಾರ್ಮಿಕರ ಮೊತ್ತವನ್ನು ರೂಪಾಯಿ 289ರೂ.ನಿಂದ ರೂಪಾಯಿ 309ರೂ.ವರೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಮಿಕರ ಕೂಲಿ ಮೊತ್ತವನ್ನು ಹೆಚ್ಚಿಸಿ ಕೂಲಿಕಾರರಿಗೆ ಸಿಹಿಸುದ್ದಿ ನೀಡಿದೆ.
ರೈತರಿಗೆ ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣದ ಬಗ್ಗೆ ಅಂದರೆ ಯಾರು ಹಸುಗಳು ಅಥವಾ ಎಮ್ಮೆಗಳನ್ನು ಸಾಕಿದ್ದಾರೋ ಅಥವಾ ನಿಮ್ಮ ಮನೆಯಲ್ಲಿ ಅಥವಾ ನಿಮ್ಮ ಮನೆ ಹಿಂದೆ ಇರುವ ಜಾಗದಲ್ಲಿ ಅಥವಾ ಎಲ್ಲಿ ನಿಮಗೆ ಸಂತ ಜಾಗವಿದೆಯೋ ಅಲ್ಲಿ ನೀವು ದನದ ಕೊಟ್ಟಿಗೆ ಅಥವಾ ದನದ ಶೆಡ್ ಅನ್ನು ನಿರ್ಮಾಣ ಮಾಡಲು ಪಂಚಾಯಿತಿ ವತಿಯಿಂದ ರೈತರಿಗೆ ಮತ್ತು ಆಸಕ್ತರಿಗೆ ಸಹಾಯಧನ ನೀಡಲಾಗುತ್ತದೆ.
ಸಾಮಾನ್ಯ ವರ್ಗದ ಜನರಿಗೆ ಸರಿ ಸುಮಾರು ರೂಪಾಯಿ 20,000 ರೂಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ವತಿಯಿಂದ ಅದನ್ನು ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸುಮಾರು 43,000ರೂಗಳ ಸಹಾಯಧನವನ್ನು ಈ ರಾಜ್ಯ ಸರ್ಕಾರದ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಪಂಚಾಯಿತಿ ಕಡೆಯಿಂದ ನೀಡುವ ಈ ಒಟ್ಟು ಮೊತ್ತದಲ್ಲಿ ಅಂದರೆ ಈ 43,000ರೂ.ಗಳಲ್ಲಿ, ಫಲಾನುಭವಿ ರೈತರಿಗೆ ಸುಮಾರು 8,996ರೂ.ಗಳನ್ನು ಅವರ ಕೂಲಿ ಮೊತ್ತವಾಗಿ ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಈ ಸಹಾಯಧನವನ್ನು ನರೇಗಾ ಕಾರ್ಡ್ ಹೊಂದಿರುವ ರೈತರಿಗೆ ಅಥವಾ ಅರ್ಜಿದಾರರಿಗೆ ಮಾತ್ರ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಶೆಡ್ ಅಥವಾ ದನದ ಕೊಟ್ಟಿಗೆ ನಿರ್ಮಾಣ ಮಾಡಲಿಕ್ಕೆ ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಉಳಿದ ಮೊತ್ತವನ್ನು ಅಂದರೆ ಉಳಿದ 34,000ರೂ.ಗಳನ್ನು ಪಂಚಾಯಿತಿ ಕಡೆಯಿಂದ ನೀಡಲಾಗುತ್ತಿತ್ತು.
ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಾಮಾನ್ಯ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಇದರ ಅರ್ಧ ಮೊತ್ತ ಸಿಗುತ್ತಿತ್ತು. ಅಂದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ರೂಪಾಯಿ 8,996ರೂ.ಗಳ ಕೂಲಿಯನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಲ್ಲರಿಗೂ ಸಮಾನವಾದ ಕೂಲಿಯನ್ನು ನೀಡಲಾಗುತ್ತದೆ.
ಆದರೆ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಿಗುವ ಉಳಿದ 34,000ರೂ.ಗಳ ಹಣದಲ್ಲಿ ಸಾಮಾನ್ಯ್ ವರ್ಗದವರಿಗೆ ಅಂದರೆ ಜನರಲ್ ಕೆಟಗರಿ ಅವರಿಗೆ ಈ 34,000ರೂ.ಗಳಲ್ಲಿ ಕೇವಲ ಅರ್ಧ ಮೊತ್ತವನ್ನು ನೀಡಲಾಗುತ್ತಿತ್ತು.
ಅಂದರೆ ಸರಿಸುಮಾರು 20,000ರೂ.ಗಳನ್ನು ಸಾಮಾನ್ಯ ವರ್ಗದವರಿಗೆ ಅಥವಾ ಜನರಲ್ ಕೆಟಗರಿಯವರಿಗೆ ಈ ಯೋಜನೆಯ ಅಡಿಯಲ್ಲಿ ಪಂಚಾಯಿತಿಯ ಕಡೆಯಿಂದ ನೀಡಲಾಗುತ್ತಿತ್ತು. ಹಾಗೂ ಅದೇ ರೀತಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭ್ಯರ್ಥಿಗಳಿಗೆ ರೂಪಾಯಿ 43,000ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ.
ರೈತರು ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ದನದ ಕೊಟ್ಟಿಗೆ ಅಥವಾ ಶೆಡ್ ನ ಅಳತೆ ಎಷ್ಟಿರಬೇಕು?
• ರೈತರು ಈ ಯೋಜಯಡಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ಕಟ್ಟುವ ದನದ ಕೊಟ್ಟಿಗೆ ಅಥವಾ ಶೆಡ್ 5 ಫೀಟ್ ಎತ್ತರದ ಗೋಡೆಯನ್ನು ಹೊಂದಿರಬೇಕು.
• ಹಸುಗಳಿಗೆ ಮೇವು ಹಾಗೂ ನೀರಿನ ವ್ಯವಸ್ಥೆಗಾಗಿ ಗೋದಲಿಯನ್ನು ನಿರ್ಮಾಣ ಮಾಡಿರಬೇಕು.
• ಜಾನುವಾರುಗಳಿಗೆ ಶೆಡ್ ನಲ್ಲಿ ಗಾಳಿ ಮತ್ತು ಬೆಳಕು ಆಡಲು ಕೊಟ್ಟಿಗೆಗೆ ಶೆಡ್ ಶೀಟ್ಗಳನ್ನು ಹಾಕಬೇಕು.
•ಇವೆಲ್ಲವುದರ ಜೊತೆಗೆ ನೀವು ಈ ಯೋಜನೆಯಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನರೇಗಾ ನಾಮಫಲಕವನ್ನು ಕಡ್ಡಾಯವಾಗಿ ಹಾಕಬೇಕಾಗಿರುತ್ತದೆ.
• ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಿಕೊಳ್ಳಲು ರೈತರು ಮೊದಲನೆಯದಾಗಿ ತಮಗೆ ಸಂಬಂಧಪಟ್ಟ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಳ್ಳಬೇಕಾಗುತ್ತದೆ. ಅಂದರೆ ಈ ಯೋಜನೆಯಡಿಯಲ್ಲಿ ಯಾರ್ಯಾರು ಸಹಾಯ ಧನವನ್ನು ಪಡೆಯಬೇಕೆಂದು ಕೊಂಡಿದ್ದರೋ ಅಥವಾ ಈ ಯೋಜನೆಯ ಫಲಾನುಭವಿಯಾಗಲು ಬಯಸುವಂತಹ ಅರ್ಜಿದಾರರು ತಮ್ಮ ಹೆಸರನ್ನು ನಿಮಗೆ ಹತ್ತಿರವಿರುವ ಅಥವಾ ನಿಮಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ನಿಮ್ಮ ಹೆಸರನ್ನು ನೋಂದಣಿ ಮಾಡಬೇಕಾಗಿರುತ್ತದೆ.
• ಪ್ರತಿವರ್ಷ ಜಾರಿಗೊಳಿಸುವ ಈ ಯೋಜನೆಯಲ್ಲಿ ನಿಮ್ಮ ಹೆಸರನ್ನು ಸೇರಿಸಬೇಕು. ಅಂದಾಗ ಮಾತ್ರ ನೀವು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
• ಇದಾದನಂತರ ಸಂಬಂಧಪಟ್ಟ ಪಂಚಾಯಿತಿಯ ಅಧಿಕಾರಿಗಳು ಬಂದು ನೀವು ದನದ ಕೊಟ್ಟಿಗೆ ಅಥವಾ ಶೆಡ್ಕಟ್ಟಬೇಕೆಂದು ಕೊಂಡಿರುವ ಖಾಲಿ ಜಾಗಕ್ಕೆ ಬಂದು ಭೇಟಿ ನೀಡಿ, ಆ ಜಾಗದ GPS ಅನ್ನು ಮಾಡಿ, ಆ ಜಾಗದ ಸರ್ವೆ ಮಾಡಿ ನಿಮಗೆ ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣ ಮಾಡಲು ಅನುಮತಿಯನ್ನು ನೀಡುತ್ತಾರೆ.
• ಅದಾದ ನಂತರ ನೀವು ಕೊಟ್ಟಿಗೆ ಕಟ್ಟಲು ಬೇಕಾಗುವ ಸಾಮಗ್ರಿಗಳನ್ನು ಪಂಚಾಯಿತಿ ನೀಡುವ ಸಹಾಯಧನದಲ್ಲಿ ತಂದು ನಿಮ್ಮ ಕೊಟ್ಟಿಗೆ ಕಟ್ಟುವ ಕೆಲಸವನ್ನು ಪ್ರಾರಂಭಿಸಬಹುದು.
• ನೀವು ಕೊಟ್ಟಿಗೆ ಕಟ್ಟುವ ಕೆಲಸವನ್ನು ಶುರು ಮಾಡುವ ಮೊದಲು ಒಂದು ಕಲ್ಲಿನ ಬೋರ್ಡನ್ನು ಅಂದರೆ ನರೇಗಾ ನಾಮಫಲಕವನ್ನು ಬರೆಸಬೇಕಾಗಿರುತ್ತದೆ.
ಈ ಬೋರ್ಡ್ ನೀವು ಯಾವ ಯೋಜನೆಯಡಿ ಈ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದೀರಿ.ಎಂಬುದನ್
ಇದರಲ್ಲಿ ನೀವು ಯೋಜನೆ ಪಡೆಯುತ್ತಿರುವ ವರ್ಷ, ಗ್ರಾಮ ಪಂಚಾಯಿತಿ ಹೆಸರು, ತಾಲೂಕು ಮತ್ತು ಜಿಲ್ಲೆಯನ್ನು ಒಳಗೊಂಡಿರುತ್ತದೆ.
ಈ ನರೇಗಾ ನಾಮಫಲಕಾದಲ್ಲಿ ಫಲಾನುಭವಿಯ ಹೆಸರು ನಮೂದಿಸಲಾಗಿರುತ್ತದೆ.
ಹಾಗೂ ಅದೇ ರೀತಿ ಫಲಾನುಭವಿಯು ಈ ನರೇಗಾ ಉದ್ಯೋಗ ಖಾತರಿ ಯೋಜನೆಯನ್ನು ಪಡೆದುಕೊಳ್ಳುತ್ತಿರುವ ಕಾಮಗಾರಿ ಸಂಕೇತವನ್ನು ಒಳಗೊಂಡಿರುತ್ತದೆ.
ಈ ನರೇಗಾ ನಾಮಫಕದಲ್ಲಿ ಈ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಒಟ್ಟು ಬಿಡುಗಡೆಯಾದ ಮೊತ್ತ, ಎಷ್ಟು ಬಿಡುಗಡೆಯಾಗಿದೆ? ಯಾವುದಕ್ಕೆಲ್ಲ ಬಿಡುಗಡೆಯಾಗಿದೆ? ಖರ್ಚಾದ ಮೊತ್ತ ಮತ್ತು ಕೊಟ್ಟಿಗೆ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳ ಮೊತ್ತ, ಎಲ್ಲವನ್ನು ಒಳಗೊಂಡಿರುತ್ತದೆ.
ನರೇಗಾ ಯೋಜನೆಯ ಅಡಿಯಲ್ಲಿ ಸಹಾಯಧನ ಪಡೆದುಕೊಳ್ಳಲು ದನದ ಕೊಟ್ಟಿಗೆ ಹೇಗಿರಬೇಕು? ಅದರ ಉದ್ದ ಮತ್ತು ಅಳತೆಗಳು ಎಷ್ಟಿರಬೇಕು?
* ದನದ ಕೊಟ್ಟಿಗೆಯ ಅಗಲವು ಸುಮಾರು ನಾಲ್ಕು ಮೀಟರುಗಳಷ್ಟು ಇರಬೇಕು.
* ದನದ ಕೊಟ್ಟಿಗೆ ಅಥವಾ ಶೆಡ್ನ ಉದ್ದವು ಏಳು ಮೀಟರ್ಗಳಷ್ಟು ಇರಬೇಕು.
*ಅಂದರೆ ಸಾಮಾನ್ಯವಾಗಿ 22 ಅಡಿ ಉದ್ದ ಮತ್ತು13 ಅಡಿ ಅಗಲವನ್ನು ಹೊಂದಿರಬೇಕಾಗುತ್ತದೆ.
* ದನದ ಕೊಟ್ಟಿಗೆಯು ಕನಿಷ್ಠ ಅಗಲ ಮತ್ತು ಉದ್ದವಗಳನ್ನು ಹೊಂದಿರಬೇಕಾಗುತ್ತದೆ.
* ಇದಕ್ಕಿಂತ ಕಡಿಮೆ ಉದ್ದ ಮತ್ತು ಅಗಲಗಳ ಅಳತೆಗಳನ್ನು ಹೊಂದಿದ್ದರೆ ನಿಮಗೆ ಸಿಗುವ ಸಹಾಯಧನದಲ್ಲಿ ಮೊತ್ತವು ಕಡಿಮೆಯಾಗುತ್ತದೆ. ಅಂದರೆ ನಿಮಗೆ ಸಿಗುತ್ತಿರುವ ಸಾಮಗ್ರಿ ಮೊತ್ತದಲ್ಲಿ ಸಹಾಯಧನ ಕಡಿಮೆಯಾಗುತ್ತದೆ.
* ಇದಕ್ಕಿಂತ ಜಾಸ್ತಿ ಉದ್ದ ಮತ್ತು ಅಗಲಗಳನ್ನು ಹೊಂದಿರಬಹುದು. ಆದರೆ ಈ ಕನಿಷ್ಠ ಅಳತೆಗಳ ಕೆಳಗೆ ಅಳತೆಗಳನ್ನು ಹೊಂದಿರಬಾರದು.
* ದನದ ಕೊಟ್ಟಿಗೆ ನಿರ್ಮಾಣದ ಸಮಯದಲ್ಲಿ ದನಗಳನ್ನು ಕಟ್ಟುವ ಜಾಗದಲ್ಲಿ ನೆಲವನ್ನು ಕಾಂಕ್ರೀಟ್ ನಿಂದ ಮಾಡಿರಬೇಕಾಗಿರುತ್ತದೆ. ಯಾವುದೇ ತರದ ಚಪ್ಪಡಿ ಕಲ್ಲುಗಳನ್ನು ಮತ್ತು ಇನ್ನಿತರೆ ರಬ್ಬರ್ ಮ್ಯಾಟ್ ಅಥವಾ ನೆಲಹಾಸುಗಳನ್ನು ಬಳಸುವಂತಿಲ್ಲ. ನೀವು ನೆಲವನ್ನು ಕಾಂಕ್ರಿಟ್ ನಿಂದ ಮಾಡಿರದಿದ್ದರೆ ನಿಮಗೆ ಸಹಾಯಧನವನ್ನು ನೀಡಲು ಬರುವುದಿಲ್ಲ.
ಮೊದಲು ನೀವು ದನದ ಕೊಟ್ಟಿಗೆ ನಿರ್ಮಾಣ ಮಾಡಬೇಕೆಂದುಕೊಳ್ಳುವ ಖಾಲಿ ಜಾಗದಲ್ಲಿ ಫೋಟೋ ತೆಗೆಯಬೇಕು. ನಂತರ 40MM ಜೆಲ್ಲಿ ಕಲ್ಲು ಅಂದರೆ(ಕಡಿಗಳು) ಗಳನ್ನು ಹಾಕಿ ಸಮತಟ್ಟು ಮಾಡಬೇಕಾಗಿರುತ್ತದೆ. ಇದಾದ ನಂತರ ಅದರ ಮೇಲೆ ಕಾಂಕ್ರೆಟ್ ನಿಂದ ನೆಲವನ್ನು ಮುಚ್ಚಬೇಕಾಗುತ್ತದೆ.
* ದನಗಳ ಕೊಟ್ಟಿಗೆಯಲ್ಲಿ ಮೇವು ಅಥವಾ ನೀರಿನ ಸೌಲಭ್ಯಕ್ಕಾಗಿ ಗೋದಲಿಯನ್ನು ಇಟ್ಟಿಗೆಯನ್ನು ಬಳಸಿ ಕಟ್ಟಬೇಕು. ಕಟ್ಟಿದ ನಂತರ ಇಟ್ಟಿಗೆಗಳನ್ನು ಪ್ಲಾಸ್ಟರ್ ನಿಂದ ಮುಚ್ಚಬೇಕು.
* ಹಾಗೆಯೇ ದನಗಳನ್ನು ಗೋದಲಿಗೆ ಕಟ್ಟಲು ಕಬ್ಬಿಣದ ಬಳೆಗಳನ್ನು ಸಹ ಬಳಸಬಹುದು.
* ದನಗಳ ಮೂತ್ರ ಮತ್ತು ಕೊಟ್ಟಿಗೆ ತೊಳೆದ ನಂತರ ಅದರ ನೀರು ಸುಲಭವಾಗಿ ಹೋಗಲು ಒಂದು ಗುಂಡಿ ಅಥವಾ ಒಂದು ಚರಂಡಿ ವ್ಯವಸ್ಥೆಯನ್ನು ಮಾಡಬೇಕಾಗಿರುತ್ತದೆ. ಅಥವಾ ನಿಮಗೆ ಚರಂಡಿ ವ್ಯವಸ್ಥೆ ಇಲ್ಲದಿದ್ದಲ್ಲಿ ನೀರನ್ನು ಇಂಗು ಗುಂಡಿಗೆ ಬಿಡಬಹುದು.
* ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ನೀವು ದನದ ಕೊಟ್ಟಿಗೆಯ ಸುತ್ತಲೂ ಗೋಡೆಯನ್ನು ಕಟ್ಟಬೇಕಾಗುತ್ತದೆ.
* ಈ ಕೊಟ್ಟಿಗೆಯನ್ನ ನಿರ್ಮಾಣ ಮಾಡಲು ಸಾಮಾನ್ಯವಾಗಿ 22,000ರೂ.ಗಳ ಖರ್ಚು ಬರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಒಟ್ಟು ಸಹಾಯಧನ 43,000ರೂ.ಗಳು ಬರುತ್ತದೆ.
ಈ ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸಹಾಯಧನ ಹೆಚ್ಚಳ ಮಾಡಿದ ನಂತರ ಒಟ್ಟು ಸಹಾಯಧನವಾಗಿ 57,000 ರೂ ಸಿಗುತ್ತದೆ. ಈ ಮೊತ್ತವನ್ನು ಎಲ್ಲಾ ಸಾಮಾನ್ಯ ವರ್ಗದವರಿಗೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೂ ಸಮವಾಗಿ ನೀಡಲಾಗುತ್ತದೆ. ಈ ಮೊತ್ತದಲ್ಲಿ ಅಂದರೆ ಒಟ್ಟಾರೆ 57,000ರೂ.ಗಳಲ್ಲಿ ಸರಿ ಸುಮಾರು 10,556ರೂ.ಗಳನ್ನು ಕೂಲಿ ಮೊತ್ತವಾಗಿ ಈ ಯೋಜನೆಯಡಿ ನೀಡಲಾಗುತ್ತದೆ. ಹಾಗೂ ಅದೇ ರೀತಿಯಾಗಿ ಸುಮಾರು 46,644ರೂ.ಗಳನ್ನು ಈ ಯೋಜನೆಯಡಿಯಲ್ಲಿ ದನದ ಕೊಟ್ಟಿಗೆ ಅಥವಾ ದನದಶೆಡ್ ನಿರ್ಮಾಣ ಮಾಡಲು ಬೇಕಾಗುವ ಸಾಮಗ್ರಿಗಳನ್ನು ಕೊಂಡುಕೊಳ್ಳಲು ಈ ಯೋಜನೆಯ ಅಡಿಯಲ್ಲಿ ಸಹಾಯಧನ ನೀಡಲಾಗುತ್ತದೆ.
ಫಲಾನುಭವಿಗಳು ಜಾನುವಾರು ಶೆಡ್ ಅಥವಾ ಕೊಟ್ಟಿಗೆಯನ್ನು ನಿರ್ಮಿಸಿಕೊಳ್ಳಲು,
#ಕನಿಷ್ಠ 4 ಜಾನುವಾರುಗಳನ್ನು ಹೊಂದಿರಬೇಕು.
#ಸಂಬಂಧಪಟ್ಟ ಪಶುವೈದ್ಯಾಧಿಕಾರಿಗಳಿಂದ ಜಾನುವಾರು ಇರುವ ಕುರಿತ ದೃಢೀಕರಣ ಪತ್ರವನ್ನು ಪಡೆಯಬೇಕು.
#ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಉದ್ಯೋಗ ಖಾತರಿ ಚೀಟಿ ಪುಸ್ತಕವನ್ನು ಹೊಂದಿರಬೇಕು.
#ಈ ಮೇಲಿನ ಉಲ್ಲೇಕಿಸಿದ ದಾಖಲಾತಿಗಳೊಂದಿಗೆ ಸ್ಥಳೀಯ ಗ್ರಾಮ ಪಂಚಾಯತಿಗೆ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
# ಗ್ರಾಮ ಪಂಚಾಯಿತಿಯವರ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಫಲಾನುಭವಿಯ ಹೆಸರು ಸೇರಿಸಿಕೊಂಡು ಮೇಲಾಧಿಕಾರಿಗಳಿಂದ ಅನುಮೋದನೆ ಪಡೆದ ನಂತರ ರೈತರು ಅವರ ದನದ ಕೊಟ್ಟಿಗೆಯ ಕಾಮಗಾರಿಯನ್ನು ಪ್ರಾರಂಭಿಸಬೇಕು.
# ಈ ಹಿಂದೆ ಉದ್ಯೋಗ ಖಾತರಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 43,000ರೂ.ಗಳ ಸಹಾಯಧನ ಹಾಗೂ ಸಾಮಾನ್ಯ ವರ್ಗದವರಿಗೆ 19,000 ರೂ.ಗಳ ಸಹಾಯಧನವನ್ನು ಈ ನರೇಗಾ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನೀಡಲಾಗುತ್ತಿತ್ತು.
ಈ ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚಿಸಿದ ಸಹಾಯಧನದ ಬಗ್ಗೆ ತಿಳಿಯಬೇಕೆಂದರೆ,
ಸಾಮಾನ್ಯ ವರ್ಗದವರಿಗೂ ಸಹ 57,000ರೂ.ಗಳ ಸಹಾಯಧನ ಈ ಯೋಜನೆ ಅಡಿಯಲ್ಲಿ ನೀಡಲಾಗುವುದು. ಸಾಮಾನ್ಯವಾಗಿ 4 ಕ್ಕಿಂತ ಹೆಚ್ಚು ಜಾನುವಾರು ಸಾಕಣೆ ಮಾಡುವವರು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.
ನರೇಗಾ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಜಾನುವಾರು ಸೆಡ್ ನಿರ್ಮಾಣಕ್ಕೆ ಸಹಾಯಧನದ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ರಾಜ್ಯದಲ್ಲಿ ಈ ಯೋಜನೆಯ ಲಾಭವನ್ನು ಪಡೆದುಕೊಂಡು ಸಹಸ್ರಾರು ಕುಟುಂಬಗಳು ಶೆಡ್ ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡು ಜಾನುವಾರು ಸಾಕಣೆಯೊಂದಿಗೆ ಉತ್ತಮ ಆದಾಯ ಮಾಡಿಕೊಳ್ಳುತ್ತಿದ್ದಾರೆ.
ಇದೀಗ ದನದ ಶೆಡ್ ನಿರ್ಮಾಣ ಮಾಡಿಕೊಳ್ಳಲು ಸಹಾಯ ಧನ ಹೆಚ್ಚಿಸಿದೆ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಅಥವಾ ಸಂಬಂಧಪಟ್ಟ ಪಂಚಾಯಿತಿಯನ್ನು ಸಂಪರ್ಕಿಸಿರಿ.
]]>ಪ್ರಸಕ್ತ(2024-25) ಸಾಲಿನ ಕೃಷಿ ಯಾಂತ್ರೀಕರಣ(Farm mechanisation) ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ(Agro processing) ಕಾರ್ಯಕ್ರಮದಡಿ ಸಹಾಯಧನದಲ್ಲಿ ಕೃಷಿ ಉಪಕರಣಗಳನ್ನು ವಿತರಿಸಲಾಗುತ್ತಿದೆ. ಸಾಮಾನ್ಯ ವರ್ಗದ ರೈತರಿಗೆ ಶೇ.50ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರಾಕ್ಟರ್(Mini tractor), ಪವರ್ ಟಿಲ್ಲರ್(Power tiller), ರೋಟೋವೇಟರ್(Rotovator), ಕಳೆ ಕೊಚ್ಚುವ ಯಂತ್ರಗಳು(ಪವರ್ ವೀಡರ್/Power weeder), ಪವರ್ ಸ್ಪ್ರೇಯರ್(power sprayer), ಡೀಸೆಲ್ ಪಂಪ್ ಸೆಟ್(Diseal pumpset), ಮೊಟೋಕರ್ಟಗಳನ್ನು ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣಾ(Agro processing) ಘಟಕಗಳಾದ ಪ್ರೋರ್ ಮಿಲ್(Flour mill), ಮಿನಿ ರೈಸ್ ಮಿಲ್(Rice mill), ರಾಗಿ ಕ್ಲೀನಿಂಗ್ ಮಿಶನ್(Ragi cleaning machine), ಚಿಲ್ಲಿಪೌಡರಿಂಗ್ ಮಿಶನ್(Chilli pounding machine), ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು(oil mill) ಮತ್ತು ಇತರೆ ಕೃಷಿ ಉಪಕರಣಗಳನ್ನು(Agriculture machinery)ಸಹಾಯಧನದಲ್ಲಿ(Subsidy) ವಿತರಿಸಲಾಗುತ್ತಿದೆ.
ರೈತರು ಪಹಣಿ(RTC), ಆಧಾರ್ ಕಾರ್ಡ್(Aadhaar card), ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್(Bank passbook), ಒಂದು ಭಾವಚಿತ್ರ, ರೂ.100ರ ಛಾಪಾ ಕಾಗದದೊಂದಿಗೆ ಹೋಬಳಿ ಮಟ್ಟದಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹೈಟೆಕ್ ಹಾರ್ವೆಸ್ಟರ್ ಹಬ್(Hi tech harvester hub)ಯೋಜನೆಯಡಿ ಕಬ್ಬು ಕಟಾವು ಯಂತ್ರ,ಕಂಬೈನ್ಡ್ ಹಾರ್ವೆಸ್ಟರ್ ಸ್ಥಾಪನೆಗೆ 50 ರಿಂದ 70% ಸಬ್ಸಿಡಿ
ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯನ್ನು ಅನುಷ್ಟಾನ ಮಾಡಲು ಸರ್ಕಾರದ ಆದೇಶವಾಗಿದ್ದು, ಈ ಯಂತ್ರಗಳನ್ನು ಬಾಡಿಗೆಗೆ ನೀಡುವ ಮೂಲಕ ರೈತರು ಹೆಚ್ಚುವರಿ ಆದಾಯ ಪಡೆಯಬಹುದಾಗಿದೆ. ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್ಗಳನ್ನು ಬೆಳೆಯ ವಿಧ ಮತ್ತು ಕಟಾವು ಅವಧಿಯ ಆಧಾರದ ಮೇಲೆ ಕಾರಿಡಾರ್ ಮಾದರಿಯಲ್ಲಿ ಸ್ಥಾಪಿಸಬಹುದು.
ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ ಗರಿಷ್ಟ
ರೂ.40 ಲಕ್ಷ ಸಹಾಯಧನ, ಪರಿಶಿಷ್ಟ ಜಾತಿ, ಪರಿಶಿಷ್ಟ
ಪಂಗಡ ವರ್ಗದ ರೈತರಿಗೆ ಗರಿಷ್ಠ ಶೇ.70ರಂತೆ ಹಾಗೂ
ಸಂಘ-ಸಂಸ್ಥೆಗಳಿಗೆ ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ
ಕೇಂದ್ರಗಳ ಸೇವಾದಾರ ಸಂಸ್ಥೆ,
ಎಫ್ಪಿಓಗಳನ್ನೊಳಗೊಂಡಂತೆ ಗರಿಷ್ಠ ಶೇ.70 ರಂತೆ
ಗರಿಷ್ಟ ರೂ.50 ಸಹಾಯಧನ ನೀಡಲಾಗುತ್ತದೆ.
ಸಂಘ-ಸಂಸ್ಥೆಗಳು, ಎಫ್ಪಿಓಗಳನ್ನೊಳಗೊಂಡಂತೆ ಟ್ರಸ್ಟ್ಗಳು ಮಾತ್ರ ಕಂಬೈಂಡ್ ಹಾರ್ವೆಸ್ಟರ್(Combined harvester) ಮತ್ತು ಶುಗರ್ ಕೆನ್ ಹಾರ್ವೆಸ್ಟಗಳನ್ನು(Sugrcane harvester) ಒಳಗೊಂಡ 'ಕೋಂಬೊ ಹಾರ್ವೆಸ್ಟರ್ ಹಬ್" ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಬೇಟಿ ಕೊಡಿ
]]>
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ(Free sheep and goat training) ತರಬೇತಿಯನ್ನು ಆಯೋಜಿಸಲಾಗಿದೆ.
ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದೂ.
Free sheep and goat farming training-ಉಚಿತ ಊಟ ವಸತಿಯೊಂದಿಗೆ 2 ದಿನಗಳ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ರೈತರುಗಳಿಗೆ ದಿನಾಂಕ 11-09-2024 ಮತ್ತು 12-09-2024 ರ ದಿನಾಂಕಗಳಂದು 2 ದಿವಸಗಳ ಕುರಿ(sheep) ಮತ್ತು ಮೇಕೆ(goat) ಸಾಕಾಣಿಕಾ (Free sheep and goat farming) ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತರು ಭಾಗವಹಿಸಲು ಕೋರಿದೆ.
1) ಭಾಗವಹಿಸುವ ಅಭ್ಯರ್ಥಿಗಳಿಗೆ ಊಟದ ವ್ಯವಸ್ಥೆ ಇರುತ್ತದೆ.
2) ವಸತಿ ವ್ಯವಸ್ಥೆ ಇರುವುದಿಲ್ಲ
3) ಅಭ್ಯರ್ಥಿಗಳು ಆಧಾರ್ ಪ್ರತಿ ಮತ್ತು 2 ಭಾವಚಿತ್ರಗಳನ್ನು ತರಲು ಸೂಚಿಸಿದೆ
4) ತರಬೇತಿ ಪ್ರಮಾಣ ಪತ್ರವನ್ನು ನೀಡಲಾಗುವುದು
5) ತರಬೇತಿಯನ್ನು ಪಶುಪಾಲನಾ ಉತ್ಕೃಷ್ಟತಾ ಕೇಂದ್ರ, ಹೆಸರಘಟ್ಟದ Regional fodder station ಮೇವು ಕೇಂದ್ರ [ಸೀಡ್ಸ್ ಫಾರಂ ಆವರಣ] ಬ್ಯಾತ ಮತ್ತು ಹೆಸರಘಟ್ಟ ರಸ್ತೆ ಇಲ್ಲಿ ನಡೆಸಲಾಗುವುದು.
ಸಂಪರ್ಕ ಮಾಹಿತಿ
1) 9060111680
2) 6363082440
Free dairy and vermicompost training-ಉಚಿತ ಊಟ ವಸತಿಯೊಂದಿಗೆ 10 ದಿನಗಳ ಹೈನುಗಾರಿಕೆ,ಎರೆಹುಳು ಗೊಬ್ಬರ ತಯಾರಿಕೆ ತರಬೇತಿ-Uchitha hainugarike tharabethi
ಬ್ಯಾಂಕ್ ಆಫ್ ಬರೋಡ ಸ್ವ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ18 - 45 ವಯೋಮಾನದವರಿಗೆ *ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ* (free dairy and Vermicompost training) ತರಬೇತಿಯನ್ನು ದಿನಾಂಕ *14.10.2024 ರಿಂದ 23.10.2024* ವರೆಗೆ 10 ದಿನಗಳ ಕಾಲ ಆಯೋಜಿಸಲಾಗಿದೆ.
ತರಬೇತಿಯಲ್ಲಿ ಕಲಿಸುವ ವಿಷಯಗಳು::
1. ಹೈನುರಾಸುಗಳ ತಳಿಗಳು (Dairy breeds)
2. ರೋಗಗಳು ಮತ್ತು ಅದರ ಲಕ್ಷಣಗಳು(Disease and their symptoms)
3. ರೋಗಗಳನ್ನು ತಡೆಗಟ್ಟುವ ಕ್ರಮಗಳು(controlling measures)
4. ಕೃತಕ ಗರ್ಭಧಾರಣೆ (Artificial Insemination)
5. ಮೇವಿನ ವಿಷಯಗಳು(Fodder)
6. ಎರೆಹುಳು ಗೊಬ್ಬರ ತಯಾರಿಕೆ (Vermicompost)
7. ಎರೆಹುಳು ನಿರ್ವಹಣೆ(Vermicompost management)
8. ಸಾವಯುವ ಕೃಷಿ ಪದ್ಧತಿಯ ಅರಿವು (Importantance of organic farming)
9. ಸಮಯದ ನಿರ್ವಹಣೆ, ಸ್ವ ಉದ್ಯೋಗದ ಮಹತ್ವ, ಸಂವಹನ ಕೌಶಲ್ಯ, ಬ್ಯಾಂಕಿಂಗ್ ವಿಷಯ ಮತ್ತು ಇನ್ನೂ ಇತರೆ ವಿಷಯಗಳ ಬಗ್ಗೆ ತಿಳುವಳಿಕೆ ನೀಡಲಾಗುವುದು.(Bank and subsidy schemes)
*ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ.*
ಹೆಸರನ್ನು ನಮೂದಿಸಲು
Free sheep farming training-ಉಚಿತ ಊಟ ವಸತಿಯೊಂದಿಗೆ 10 ದಿನಗಳ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ-Uchitha Kuri sakanike tharabethi
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್
ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಕ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 10 ದಿನಗಳ ಕುರಿ ಸಾಕಾಣಿಕೆ(Sheep farming) ಉಚಿತ ತರಬೇತಿಯು ಬರುವ 9 ಸೆಪ್ಟಂಬರ್ 2024 ರಿಂದ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು(Uchitha Kuri sakanike tharabethi) ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಲೆಟ್ ಸಂಸ್ಥೆ,ಯನ್ನು ಸಂಪರ್ಕಿಸಬಹುದಾಗಿದೆ ಎಂದು ರುಕ್ಸೆಟ್ ಸಂಸ್ಥೆಯ ಶಾಖೆಯ ನಿರ್ದೇಶಕರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://kswdcl.karnataka.gov.in/info-2/Scientific+Sheep+Rearing+Training/kn
]]>ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.
ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.
ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು" ಮೇಲೆ ಕ್ಲಿಕ್ ಮಾಡಿ
ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
ಗ್ರಾಮೀಣ ಮತ್ತು ನಗರ ಕೃಷಿಯೇತರ ಕ್ಷೇತ್ರಗಳಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯೊಂದಿಗೆ, ಭಾರತ ಸರ್ಕಾರವು 2008 ರಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಷ್ಟಿ ಕಾರ್ಯಕ್ರಮವನ್ನು (PMEGP) ಘೋಷಿಸಿದೆ. ಯೋಜನೆಯು ಎರಡು ಕಾರ್ಯಾಚರಣಾ ಯೋಜನೆಗಳನ್ನು ವಿಲೀನಗೊಳಿಸುತ್ತದೆ, ಅವುಗಳೆಂದರೆ ಪ್ರಧಾನ ಮಂತ್ರಿ ರೋಜ್ಗರ್ ಯೋಜನೆ ಮತ್ತು ಗ್ರಾಮೀಣ ಉದ್ಯೋಗ ಸೃಷ್ಟಿ ಕಾರ್ಯಕ್ರಮ(Pradan mantri employment generation programme)
PMEGP ಯೋಜನೆಯನ್ನು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯವು ನಿರ್ವಹಿಸುತ್ತದೆ, ಆದರೆ ಅದರ ಅನುಷ್ಠಾನವನ್ನು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (KVIC) ನಡೆಸುತ್ತದೆ. ಮೇಲೆ ತಿಳಿಸಿದ ಪ್ರದೇಶದಲ್ಲಿ, ಕಿರು ಉದ್ಯಮಗಳನ್ನು ಸ್ಥಾಪಿಸಲು ಸರ್ಕಾರವು ಸಹಾಯಧನವನ್ನು (PMEGP subsidy)ನೀಡುತ್ತದೆ.
ಈ ಯೋಜನೆಯು ಗ್ರಾಮೀಣ ಮತ್ತು ನಗರ ಪ್ರದೇಶದ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ನಿರುದ್ಯೋಗಿ ಯುವಕರನ್ನು ಒಟ್ಟುಗೂಡಿಸಲು ಸಹಾಯ ಮಾಡುತ್ತದೆ, ಅವರಿಗೆ ಆಯಾ ಸ್ಥಳಗಳಲ್ಲಿ ಸ್ವಯಂ ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ. ನಿರಂತರ ಮತ್ತು ಸುಸ್ಥಿರ ಉದ್ಯೋಗವು ಗ್ರಾಮೀಣ ಮತ್ತು ನಗರ ಯುವಕರ ವಲಸೆಯನ್ನು ನಿಲ್ಲಿಸಬಹುದು.
ಈ ಯೋಜನೆಯ ಪ್ರಯೋಜನ ಏನು?(Pmegp scheme benefits)
ಹೊಸ ಘಟಕಗಳು
ಹೊಸ ಘಟಕಗಳನ್ನು ಸ್ಥಾಪಿಸಲು ಗರಿಷ್ಠ ಯೋಜನಾ ವೆಚ್ಚವು 50 ಲಕ್ಷ ಮತ್ತು ಉತ್ಪಾದನೆ ಮತ್ತು ವ್ಯಾಪಾರ ಅಥವಾ ಸೇವಾ ವಲಯಕ್ಕೆ 20 ಲಕ್ಷ ನೀಡಲಾಗುತ್ತದೆ. ಯೋಜನಾ ವೆಚ್ಚದ ಉಳಿದ ಬಾಕಿಯನ್ನು ಅರ್ಜಿದಾರರ ಕೊಡುಗೆಯನ್ನು ಹೊರತುಪಡಿಸಿ ಬ್ಯಾಂಕ್ಗಳು ಒದಗಿಸುತ್ತವೆ. ಯೋಜನಾ ವೆಚ್ಚವು ಉತ್ಪಾದನೆ ಮತ್ತು ವ್ಯಾಪಾರ ಅಥವಾ ಖಾಸಗಿ ವಲಯಕ್ಕೆ ಮಿತಿ ಮಿತಿಯನ್ನು ಮೀರಿದರೆ, ಯಾವುದೇ ಸರ್ಕಾರಿ ಸಬ್ಸಿಡಿಯೊಂದಿಗೆ ಬ್ಯಾಂಕಿನಿಂದ ಬಾಕಿ ವೆಚ್ಚವನ್ನು ಒದಗಿಸಲಾಗುತ್ತದೆ.
ನಗರ ಮತ್ತು ಗ್ರಾಮೀಣ ಸಾಮಾನ್ಯ ಅರ್ಜಿದಾರರಿಗೆ ಅನುಕ್ರಮವಾಗಿ 15% ಮತ್ತು 25% ಸಬ್ಸಿಡಿ ಇದೆ. ಹಾಗೆಯೇ ವಿಶೇಷ ವರ್ಗದ ನಗರ ಮತ್ತು ಗ್ರಾಮೀಣ ಅರ್ಜಿದಾರರಿಗೆ ಅನುಕ್ರಮವಾಗಿ 25% ಮತ್ತು 35% ಸಬ್ಸಿಡಿ ನೀಡಲಾಗುತ್ತದೆ.
ಅಸ್ತಿತ್ವದಲ್ಲಿರುವ ಘಟಕಗಳಿಗೆ 2 ನೇ ಸಾಲ
ಉತ್ಪಾದನಾ ವಲಯದ ಉನ್ನತೀಕರಣಕ್ಕಾಗಿ ಅಸ್ತಿತ್ವದಲ್ಲಿರುವ ಘಟಕಗಳಿಗೆ ಗರಿಷ್ಠ ಯೋಜನಾ ವೆಚ್ಚವು 1 ಕೋಟಿ ರೂ. ಆಗಿದೆ. ಮೇಲ್ದರ್ಜೆಗೇರಿಸಲು ಅಸ್ತಿತ್ವದಲ್ಲಿರುವ ವ್ಯಾಪಾರ ಅಥವಾ ಸೇವಾ ವಲಯಕ್ಕೆ ಗರಿಷ್ಠ ಯೋಜನಾ ವೆಚ್ಚವು 25 ಲಕ್ಷ ರೂ. ಆಗಿದೆ. ಒಟ್ಟು ಯೋಜನಾ ವೆಚ್ಚವು ಕೊಟ್ಟಿರುವ ಮಿತಿ ಮಿತಿಯನ್ನು ಮೀರಿದರೆ ಉಳಿದ ಮೊತ್ತವನ್ನು ಯಾವುದೇ ಸಬ್ಸಿಡಿ ನೀಡದೆ ಬ್ಯಾಂಕ್ ಒದಗಿಸುತ್ತದೆ.NER ಮತ್ತು ಗುಡ್ಡಗಾಡು ರಾಜ್ಯಗಳ ಫಲಾನುಭವಿಗಳನ್ನು ಹೊರತುಪಡಿಸಿ, ಇತರ ಪ್ರದೇಶಗಳಿಗೆ ಲಭ್ಯವಿರುವ ಸಬ್ಸಿಡಿ 10% ಆಗಿದೆ.
ಈ ಯೋಜನೆಯ ಲಾಭ ಪಡೆಯಲು ಅರ್ಹತೆ ಏನಿರಬೇಕು(PMEGP eligibility)
ಯಾವುದೇ ವೈಯಕ್ತಿಕ ಅರ್ಜಿದಾರರು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು.
ಸ್ವಸಹಾಯ ಗುಂಪುಗಳು, ಸಂಘಗಳ ನೋಂದಣಿ ಕಾಯ್ದೆಯಡಿ ನೋಂದಾಯಿತ ಸಂಸ್ಥೆಗಳು, ಉತ್ಪಾದನಾ ಸಹಕಾರ ಸಂಘಗಳು ಮತ್ತು ಚಾರಿಟಬಲ್ ಟ್ರಸ್ಟ್ಗಳು ಸಹ ಅರ್ಹವಾಗಿವೆ.
ಯೋಜನೆಯನ್ನು ಸ್ಥಾಪಿಸಲು ಪ್ರತಿ ಕುಟುಂಬದಿಂದ ಒಬ್ಬ ವ್ಯಕ್ತಿ ಮಾತ್ರ ಯೋಜನೆಗೆ ಅರ್ಹರಾಗಿರುತ್ತಾರೆ.
ಯೋಜನೆಯಡಿಯಲ್ಲಿ ಹೊಸ ಯೋಜನೆಗಳನ್ನು ಸ್ಥಾಪಿಸಲು, ಲಭ್ಯವಿರುವ ಸಹಾಯದ ಮೇಲೆ ಯಾವುದೇ ಮಿತಿ ಇರುವುದಿಲ್ಲ.
ಅರ್ಜಿದಾರರು ಉತ್ಪಾದನಾ ವಲಯದಲ್ಲಿ 10 ಲಕ್ಷ ಮತ್ತು ವ್ಯಾಪಾರ ಅಥವಾ ಸೇವಾ ವಲಯದಲ್ಲಿ ರೂ 5 ಲಕ್ಷಕ್ಕಿಂತ ಹೆಚ್ಚಿನ ಯೋಜನೆಯನ್ನು ಸ್ಥಾಪಿಸಲು ಬಯಸಿದರೆ, 8 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
PMEGP ಅಡಿಯಲ್ಲಿ ಮಂಜೂರಾದ ಹೊಸ ಯೋಜನೆಗಳು ಮಾತ್ರ ಸಹಾಯಕ್ಕೆ ಅರ್ಹವಾಗಿರುತ್ತವೆ.
PMRY, REGP ಅಥವಾ ಯಾವುದೇ ಇತರ ಸರ್ಕಾರಿ ಯೋಜನೆಯ ಅಡಿಯಲ್ಲಿ ಸಹಾಯ ಅಥವಾ ಸಹಾಯಧನವನ್ನು ಪಡೆದಿರುವ ಅಸ್ತಿತ್ವದಲ್ಲಿರುವ ಘಟಕಗಳು ಅರ್ಹವಾಗಿರುವುದಿಲ್ಲ.
ಬಂಡವಾಳ ವೆಚ್ಚದ ಯೋಜನೆಗಳು ಯೋಜನೆಯಡಿಯಲ್ಲಿ ಹಣಕಾಸು ಒದಗಿಸಲು ಮಾತ್ರ ಅರ್ಹವಾಗಿರುತ್ತವೆ.
ಯೋಜನೆಯ ವೆಚ್ಚದಿಂದ ಭೂಮಿಯ ವೆಚ್ಚವನ್ನು ಹೊರಗಿಡಬೇಕು.
ರೆಡಿ ಶೆಡ್ ವೆಚ್ಚ ಅಥವಾ ದೀರ್ಘ ಗುತ್ತಿಗೆ ಅಥವಾ ಬಾಡಿಗೆ ಕೆಲಸದ ಶೆಡ್ / ಕಾರ್ಯಾಗಾರವನ್ನು 3 ಗರಿಷ್ಠ ವರ್ಷಗಳ ಅವಧಿಗೆ ಯೋಜನೆಯಲ್ಲಿ ಸೇರಿಸಿಕೊಳ್ಳಬಹುದು.
ಅಗತ್ಯವಿರುವ ದಾಖಲೆಗಳು(PMEGP documents)
ಆಧಾರ್ ಕಾರ್ಡ್
ಪಾಸ್ಪೋರ್ಟ್ ಗಾತ್ರದ ಫೋಟೋ
ಜಾತಿ ಪ್ರಮಾಣ ಪತ್ರ
ವಿಶೇಷ ವರ್ಗದ ಪ್ರಮಾಣಪತ್ರ (ಅನ್ವಯಿಸಿದರೆ)
ಗ್ರಾಮೀಣ ಪ್ರದೇಶದ ಪ್ರಮಾಣಪತ್ರ
ಯೋಜನೆಯ ವರದಿ
ಶಿಕ್ಷಣದ ಪ್ರಮಾಣಪತ್ರ/ಇಡಿಪಿ/ಕೌಶಲ್ಯ ಅಭಿವೃದ್ಧಿ ತರಬೇತಿ
ಪ್ಯಾನ್ ಕಾರ್ಡ್
ವಿಳಾಸ ಪುರಾವೆ
ಅಗತ್ಯವಿರುವಂತೆ ಇತರ ದಾಖಲೆಗಳು
ಇದನ್ನೂ ಓದಿ: ಭಾರತದಲ್ಲಿ ಕಿಯಾ ಸೆಲ್ಟೋಸ್, ಸೋನೆಟ್, ಕ್ಯಾರೆನ್ಸ್ ಗ್ರಾವಿಟಿ ಆವೃತ್ತಿ ಲಾಂಚ್! ಬೆಲೆ ಬಗ್ಗೆ ಇಲ್ಲಿದೆ ಮಾಹಿತಿ
ಅರ್ಜಿ ಸಲ್ಲಿಸುವುದು ಹೇಗೆ?(How to apply for PMEGP scheme)
ಆಸಕ್ತ ಮತ್ತು ಅರ್ಹ ಫಲಾನುಭವಿಯು KVIC ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ PMEGP ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಭರ್ತಿ ಮಾಡಿದ ಅರ್ಜಿಯನ್ನು ಆಯಾ MSME DI ಗೆ ಕಳುಹಿಸುವ ಮೂಲಕ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಪರ್ಕ ವಿವರಗಳು(PMEGP contact details)
PMEGP ಸಂಪರ್ಕ ವಿವರಗಳು: 022-26711017
[email protected]
ವಿಭಾಗೀಯ ಕಛೇರಿ ಹುಬ್ಬಳ್ಳಿ : 0836-2282882, 9741482882
[email protected]
ರಾಜ್ಯ ಕಛೇರಿ ಬೆಂಗಳೂರು080-25665885
[email protected]
2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಇದ್ದಾಗ ರಾಜ್ಯದ ರೈತರ ಸಾಲಮನ್ನಾ(Bele sala manna) ಮಾಡಿದ್ದರು.ಆದರೆ ಅದರಲ್ಲಿ ಕೇಲವು ರೈತರ ದಾಖಲೆಗಳ ಕೊರತೆಯಿಂದಾಗಿ ಬಾಕಿ ಉಳಿದ ಪ್ರಕರಣಗಳಲ್ಲಿ ದಾಖಲಾತಿಗಳನ್ನು ಸಲ್ಲಿಸಿದ ನಂತರ ಸಾಲಮನ್ನಾ ಆಗುತ್ತಿದೆ.ಹಾಗಾದರೆ ಈ ಲೇಖನದಲ್ಲಿ ಯಾವೆಲ್ಲಾ ದಾಖಲಾತಿಗಳು ಬೇಕಾಗಬಹುದು ಎಂದು ಚೆಕ್ ಮಾಡಬಹುದು.
ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/department
ನಂತರ "ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ
ನಂತರ "ಕಂದಾಯ ಇಲಾಖೆ ಸೇವೆಗಳು" ಮೇಲೆ ಕ್ಲಿಕ್ ಮಾಡಿ
ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ
ನಂತರ ಮಾದರಿ "ರೈತ" ಎಂದು Select ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.
ಹಸಿರು ಪಟ್ಟಿಯಲ್ಲಿ(Bele sala manna list) ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/department
ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್(bank) select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ(crop loan wavier) ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು
ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ
ಮಳೆಯ ಕಾರಣಕ್ಕೆ ರಾಜ್ಯಾದ್ಯಂತ 80,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶ(crop loss)ವಾಗಿದ್ದು, ವಾರದೊಳಗಾಗಿ ಎಲ್ಲಾ ರೈತರಿಗೂ ಪರಿಹಾರ(parihara) ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.
ಈ ಬಗ್ಗೆ ಮಾತನಾಡಿದ ಅವರು, "ರಾಜ್ಯಾದ್ಯಂತ ಕೃಷಿ ಬೆಳೆ 78679 ಹೆಕ್ಟೇರ್ ಹಾನಿ(bele hani)ಯಾಗಿದ್ದರೆ, ತೋಟಗಾರಿಕಾ ಬೆಳೆ 2294 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ.
ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿವೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು. ಪ್ರಸ್ತುತ ರಾಜ್ಯ ಸರ್ಕಾರದ ಬಳೆ ಇರುವ ಸಂಪನ್ಮೂಲದಲ್ಲೇ ಪರಿಹಾರ ನೀಡಲಾಗುವುದು. ಇನ್ನೂ ಒಂದೂವರೆ ತಿಂಗಳ ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆಹಾನಿ(croploss)ಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು ತದನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು' ಎಂದು ತಿಳಿಸಿದರು.
ಬೆಳೆಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್ ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.
ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.
ಸಾಲ ವಿವರ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು
https://landrecords.karnataka.gov.in/Service2/
ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ.
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಇದನ್ನೂ ಓದಿ
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427
ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ. ಎಂಬ ಮಾಹಿತಿ ಇರುತ್ತದೆ.
ಈ ಮಾಹಿತಿ ರೈತರಿಗೆ ತುಂಬಾ ಅನುಕೂಲವಾಗಿದೆ ಸರ್ವೇ ನಂಬರ್ ನಮೂದಿಸಿದರೆ ಸಾಕು ರೈತರು ದೇಶದ ಯಾವುದೇ ಮೂಲೆಯಿಂದಲೂ ಮಾಹಿತಿ ಪಡೆಯಬಹುದು. ಕೇವಲ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವ ಮಾಹಿತಿ ಎಲ್ಲವೂ ರೈತರಿಗೆ ಸಿಗಲಿದೆ.
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
ಸ್ವಾವಲಂಬಿ ಸಾರಥಿ ಯೋಜನೆ
ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.
ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು
ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.
ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.
ಡ್ರೈವಿಂಗ್ ಲೈಸೆನ್ಸ್
ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.
ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಹಿಂದುಳಿದ ವರ್ಗದವರಾಗಿರಬೇಕು.
ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ
(DL) ಡ್ರೈವಿಂಗ್ ಲೈಸೆನ್ಸ್
ಫೋಟೋ
ಮೊಬೈಲ್ ನಂಬರ್
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಿ ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್, 31 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು.
]]>