Krushi Rushi News Website & Latest Posts https://krushirushi.in/rss/latest-posts Krushi Rushi News Website & Latest Posts en Copyright 2025 Krushi Rushi & All Rights Reserved ಶೇಂಗಾ ತೆಂಗಿನಕಾಯಿ ಬೆಳೆಯುವ ರೈತರೇ PMFME ಯೋಜನೆಯಡಿ 15 ಲಕ್ಷ ಸಬ್ಸಿಡಿಯೊಂದಿಗೆ ಎಣ್ಣೆಗಾಣ ಮಾಡಿ ಯಶಸ್ವಿ https://krushirushi.in/PMFME-yojane https://krushirushi.in/PMFME-yojane PMFME ಯೋಜನೆಯಡಿ ರೊಟ್ಟಿ ಮಶೀನ್,ಹಿಟ್ಟಿನ ಗಿರಣೆ,ಎಣ್ಣಿ ಗಾಣ,ಬೆಲ್ಲದ ಗಾಣ,ಖಾರದ ಪುಡಿ,ಶಾವಿಗೆ,ಬೇಕರಿ,ಕುರಿ,ಕೋಳಿ ಫುಡ್ ತಯಾರಿಕೆಗೆ 15 ಲಕ್ಷ ಸಬ್ಸಿಡಿ-PMFME subsidy scheme

ಕರ್ನಾಟಕದಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗಾಗಿ PMFME ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸುವ ಸಭೆಯನ್ನು ಇಂದು ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಯಿತು.

ಈ ಯೋಜನೆ ಅಡಿಯಲ್ಲಿ ಸಿರಿಧಾನ್ಯಗಳು, ಬೆಲ್ಲ, ಬೇಕರಿ ಉತ್ಪನ್ನಗಳು ಸೇರಿದಂತೆ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಶೇ. 50 ಅಥವಾ ಗರಿಷ್ಠ ₹15 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತಿದೆ. ಇದರಲ್ಲಿ ಕೇಂದ್ರದ ₹6 ಲಕ್ಷ ಮತ್ತು ರಾಜ್ಯದ ₹9 ಲಕ್ಷ ಪಾಲು ಸೇರಿದ್ದು, ವೈಯಕ್ತಿಕ ಉದ್ದಿಮೆದಾರರು, ಗುಂಪುಗಳು ಮತ್ತು ಸ್ವಸಹಾಯ ಸಂಘಗಳಿಗೆ ಇದು ವರದಾನವಾಗಿದೆ. ಸ್ವಸಹಾಯ ಸಂಘಗಳ ಸದಸ್ಯರಿಗೆ ₹40,000 ವರೆಗೆ ಬೀಜ ಬಂಡವಾಳ ಮತ್ತು ಸಂಘಗಳಿಗೆ ₹4 ಲಕ್ಷದ ವರೆಗೆ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ.

ಕೃಷಿಕರನ್ನು ಉದ್ಯಮಿಗಳನ್ನಾಗಿ ಪರಿವರ್ತಿಸುವ ಗುರಿ ಹೊಂದಿರುವ ಕೆಪೆಕ್, ಈ ಯೋಜನೆಯಡಿ ಕರ್ನಾಟಕದಲ್ಲಿ 11,910 ಉದ್ಯಮಗಳನ್ನು ಸ್ಥಾಪಿಸಲು/ಉನ್ನತೀಕರಿಸಲು ₹493 ಕೋಟಿ ಅನುದಾನ ಮೀಸಲಿಟ್ಟಿದೆ. ಇದು ವೈಯಕ್ತಿಕ ಉದ್ಯಮಿಗಳಿಗೆ 35% (60:40) ಸಬ್ಸಿಡಿ ಜೊತೆಗೆ ಕರ್ನಾಟಕ ಸರ್ಕಾರದಿಂದ 15% ಹೆಚ್ಚುವರಿ ಟಾಪ್-ಅಪ್ ಸಬ್ಸಿಡಿ ನೀಡುತ್ತದೆ.

ಈಗಾಗಲೇ 6,585 ಅರ್ಜಿಗಳಿಗೆ ಸಾಲ ಮಂಜೂರಾಗಿದ್ದು, ₹756.48 ಕೋಟಿ ಬಂಡವಾಳ ಹೂಡಿಕೆಯಾಗಿದೆ. 4,489 ಫಲಾನುಭವಿಗಳಿಗೆ ₹162.50 ಕೋಟಿ ಸಹಾಯಧನ ಹಾಗೂ 3,770 ಫಲಾನುಭವಿಗಳಿಗೆ ₹59.48 ಕೋಟಿ ಹೆಚ್ಚುವರಿ ಸಹಾಯಧನ ಬಿಡುಗಡೆ ಮಾಡಲಾಗಿದೆ. ಜೊತೆಗೆ, 5 ಬ್ರ್ಯಾಂಡಿಂಗ್ ಮಾರ್ಕೆಟಿಂಗ್ ಪ್ರಸ್ತಾವನೆಗಳು, 4 ಸಾಮಾನ್ಯ ಮೂಲಭೂತ ಸೌಕರ್ಯ ಘಟಕಗಳು ಮತ್ತು 14 ಇನ್ಕ್ಯುಬೇಷನ್ ಕೇಂದ್ರಗಳನ್ನು ಸ್ಥಾಪಿಸಿ, ರಾಜ್ಯದಲ್ಲಿ ಆಹಾರ ಸಂಸ್ಕರಣಾ ವಲಯದ ಬೆಳವಣಿಗೆಗೆ ಆದ್ಯತೆ ನೀಡಲಾಗುತ್ತಿದೆ.

#PMFME #FoodProcessing #Agriculture #Empowerment #KEPEC #Farmers #SelfHelpGroups

ಪಿಎಂಎಫ್ಎಮ್ ಇ ಯೋಜನೆಯಡಿ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಅರ್ಜಿ ಆಹ್ವಾನ-pmfme subsidy scheme 

ಯಾವ ಯಾವ ಉದ್ಯಮ ಮಾಡಬಹುದು?
 ರೊಟ್ಟಿ ಮಾಡುವ ಯಂತ್ರ, ಎಣ್ಣೆಗಾಣ, ಬೆಲ್ಲದ ಗಾಣ, ಕಾರದಪುಡಿ ಘಟಕ, ಶಾವಿಗೆ, ಹಪ್ಪಳ-ಸಂಡಿಗೆ, ಹಿಟ್ಟಿನ ಗಿರಣಿ, ಬೇಕರಿ ಉತ್ಪನ್ನ, ಹಾಲಿನ ಉತ್ಪನ್ನ, ಉಪ್ಪಿನಕಾಯಿ ಸೇರಿದಂತೆ ಕಿರು ಆಹಾರ ಸಂಸ್ಕರಣೆ

 ಅರ್ಜಿ ಸಲ್ಲಿಸುವುದು ಹೇಗೆ?
 ಅರ್ಜಿ ಸಲ್ಲಿಸುವವರು http://mofpi.nic.in/pmfme/ ಪೋರ್ಟಲ್ ನಲ್ಲಿ ವಿವರಗಳನ್ನು ಭರ್ತಿ ಮಾಡಬೇಕು ಅಥವಾ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಮೂಲಕ ಕೂಡ ಅರ್ಜಿ ವಿವರಗಳನ್ನು ಭರ್ತಿ ಮಾಡಿಸಬಹುದು. ಜಿಲ್ಲಾ ಮಟ್ಟದಲ್ಲಿ ನೇಮಿಸಲ್ಪಟ್ಟ ಸಂಪನ್ಮೂಲ ವ್ಯಕ್ತಿಗಳು(District resource person) ಅರ್ಜಿ ಹಾಗೂ ಯೋಜನಾ ವರದಿ(Detail project report) ಪರಿಶೀಲಿಸಿ ಜಿಲ್ಲಾ ಮಟ್ಟದ ಸಮಿತಿಗೆ ಸಲ್ಲಿಸುತ್ತಾರೆ. ಸಮಿತಿ ಅಧ್ಯಕ್ಷರು ಜಂಟಿ ಕೃಷಿ ನಿರ್ದೇಶಕ ರಾಗಿದ್ದು, ಸದರಿ ಅರ್ಜಿಗಳನ್ನು ಸಮಿತಿಯಲ್ಲಿಟ್ಟು ಅರ್ಹ ಫಲಾನುಭವಿಗಳ ಆಯ್ಕೆ ಮಾಡಿಕೊಂಡು, ಬ್ಯಾಂಕ್ಗಳಿಗೆ ಸಾಲ ಮಂಜೂರಾತಿಗಾಗಿ ಕಳುಹಿಸುತ್ತಾರೆ. ಸಂಸ್ಥೆಗಳ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಸಮಿತಿಯು ನೋಡಲ ಏಜೆನ್ಸಿಗೆ ವರ್ಗಾಯಿಸುತ್ತದೆ ಹಾಗೂ ಅರ್ಜಿದಾರರಿಗೆ ಮಾಹಿತಿ ನೀಡಲು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸಹಕರಿಸುತ್ತಾರೆ. ಒಂದು ವೇಳೆ ಅರ್ಜಿಗಳು ಸಂಸ್ಥೆಗಳಿಂದ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಮಟ್ಟದ ಸಮಿತಿ ವರದಿ ಸಲ್ಲಿಸುತ್ತದೆ.ರಾಜ್ಯ ಮಟ್ಟದ ಸಮಿತಿಗೆ ಸಲ್ಲಿಸುತ್ತದೆ. 15 ಲಕ್ಷಕ್ಕೂ ಹೆಚ್ಚು ಸಹಾಯಧನ ಬೇಕಾಗಿದ್ದಲ್ಲಿ ಸದರಿ ಅರ್ಜಿಗಳನ್ನು ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ಯಮಗಳ ಮಂತ್ರಾಲಯಕ್ಕೆ ಅನುಮೋದನೆಗಾಗಿ ಕಳುಹಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್(Aadhar card)
ಪ್ಯಾನ್ ಕಾರ್ಡ್(Pan card)
ಬ್ಯಾಂಕ್ ಪಾಸಬುಕ್(Bank passbook)

PMFME-ಕಿರು ಆಹಾರ ಉದ್ಯಮ ಸ್ಥಾಪನೆಗೆ 50% ಸಬ್ಸಿಡಿ,ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ಜಿಲ್ಲೆಗಳ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ (DRP contact number) ಸಂಪರ್ಕ ಸಂಖ್ಯೆ ತಿಳಿಯಲು ಈ ಕೆಳಗಿನ pdf download ಮಾಡಿಕೊಳ್ಳಿ
]]>
Wed, 16 Jul 2025 18:40:46 +0530 shivuagrico
Rain alert&ವಾಯುಭಾರ ಕುಸಿತ,ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಸುರಿಯಲಿದೆ ಮಳೆ https://krushirushi.in/Rain-alert https://krushirushi.in/Rain-alert Rain alert-ವಾಯುಭಾರ ಕುಸಿತ,ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ  ಸುರಿಯಲಿದೆ ಮಳೆ

ಕರಾವಳಿ :  ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಹಾಗೂ ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಈಗಿನಂತೆ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಜುಲೈ 16ರಿಂದ 20ರ ತನಕ ಉತ್ತಮ ಮಳೆಯ ಮುನ್ಸೂಚನೆ ಇದೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಉತ್ತರ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ ಜಿಲ್ಲೆಯ ಒಂದೆರಡು ಕಡೆ ಮಳೆಯ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಈಗಿನಂತೆ ಜುಲೈ 16ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಬೆಂಗಳೂರಿಗೆ ಜುಲೈ 18 ಮತ್ತು 19 ರಂದು ಸಾಧಾರಣದಿಂದ ಭಾರೀ ಮಳೆ ಬರಲಿದೆ.
ಇದರೊಂದಿಗೆ ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಹ ಭಾರೀ ಮಳೆ ನಿರೀಕ್ಷೆ ಹಿನ್ನೆಲೆ ಎರಡು ದಿನ ಯೆ ಲೆ ಅಲರ್ಟ್ ನೀಡಲಾಗಿದೆ.
ಅರಬ್ಬಿ ಸಮುದ್ರ ಭಾಗದಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿ ರುವ ಕಾರಣ ಮುಂದಿನ ಮೂರುದಿನ ಗಳಲ್ಲಿ ಒಳನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಜುಲೈ 16 ಮತ್ತು 17 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಬರಲಿದ್ದು, ಎರಡು ದಿನ 'ಆರೆಂಜ್ ಅಲರ್ಟ್‌' ನೀಡಲಾಗಿದೆ.

]]>
Wed, 16 Jul 2025 07:34:43 +0530 shivuagrico
Mullu sajje&ಮುಳ್ಳುಸಜ್ಜೆ ಕಳೆ ನಿವಾರಣೆಗೆ ಬಂತು ಕಳೆನಾಶಕ ಔಷಧಿ https://krushirushi.in/Mullu-sajje-2221 https://krushirushi.in/Mullu-sajje-2221 Mullu sajje-ಮುಳ್ಳುಸಜ್ಜೆ ಕಳೆ ನಿವಾರಣೆಗೆ ಬಂತು ಕಳೆನಾಶಕ ಔಷಧಿ


ಮೆಕ್ಕೆಜೋಳ ಬೆಳೆಗಳಲ್ಲಿ ಬೆಂಬಿಡದೆ ಭೂತದಂತೆ ಕಾಡುತ್ತಿದ್ದ ಮುಳ್ಳುಸಜ್ಜೆ ಕಳೆ ನಿವಾರಣೆಗೆ ಕೊನೆಗೂ ಪರಿಹಾರ ದೊರೆತಿದೆ ಎಂದು ಚನ್ನಗಿರಿ ತಾಲೂಕು ಕತ್ತಲಗೆರೆ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ವಿಸ್ತರಣಾ ಮುಂದಾಳು ಡಾ.ಗಂಗಪ್ಪಗೌಡ ಎಸ್‌.ಬಿರಾದಾರ ತಿಳಿಸಿದರು.
ಶನಿವಾರ ದಾವಣಗೆರೆ ತಾಲೂಕಿನ ಗೋಣಿ ವಾಡ ಗ್ರಾಮದ ರೈತರೊಬ್ಬರ ಮೆಕ್ಕೆಜೋಳದ ಜಮೀನಿಗೆ ಭೇಟಿ ನೀಡಿ ಪ್ರಾತ್ಯಕ್ಷಿಕೆ ನಡೆಸಿ, ಮಾತನಾಡಿದರು.


'ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ವಿಜ್ಞಾನಗಳ ವಿಶ್ವವಿದ್ಯಾಲಯವು ಕೆಲ ವರ್ಷಗಳಿಂದ ನಡೆಸಿದ ಸಂಶೋಧನೆಯ ಹಂತದಲ್ಲಿಯೇ ಫಲ ನೀಡಿದೆ. ಕತ್ತಲಗೆರೆ ಕೃಷಿ ಮತ್ತು ತೋಟಗಾರಿಕಾ ಸಂಶೋ ಧನಾ ಕೇಂದ್ರದ ಕೃಷಿ ವಿಜ್ಞಾನಿಗಳು ಹೊನ್ನಾಳಿ, ಚನ್ನಗಿರಿ, ದಾವಣಗೆರೆ, ಹರಿಹರ ತಾಲೂಕುಗಳ ರೈತರ ಮೆಕ್ಕೆಜೋಳದ ಜಮೀನುಗಳಲ್ಲಿ ನಡೆಸಿದ್ದು ಕಳೆನಾಶಕ ಔಷಧ ಸಿಂಪಡಣೆ ಪ್ರಯೋಗದಿಂದ ಬೆಳೆಯಲ್ಲಿದ್ದ ಮುಳ್ಳುಸಜ್ಜೆ ಕಳೆನಾಶವಾಗಿರುವುದು ಸಾಬೀತಾಗಿದೆ. ಸಂಶೋಧನಾ ಹಂತದಲ್ಲಿ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ' ಎಂದು ತಿಳಿಸಿದರು.

ಕಳೆ ನಿರ್ವಹಣೆ ಔಷಧ(Weedicide): 'ಬಿತ್ತನೆ ಮಾಡಿದ ಮೂರು ದಿನಗಳೊಳಗಾಗಿ 'ಪೆಂಡಿ ಮೆಥಾಲಿನ್ 30 ಇಸಿ' ಒಂದು ಲೀಟರ್ ನೀರಿಗೆ 8ರಿಂದ 10 ಎಂಎಲ್ ಹಾಕಿ ಸಿಂಪಡಣೆ ಮಾಡಬೇಕು. ನಂತರ 12 ರಿಂದ 15 ದಿನಗಳ ಬೆಳೆಗೆ ಹಾಗೂ 30 ದಿನಗಳ ಬೆಳೆಯಲ್ಲಿರುವ (ಸಣ್ಣ) ಮುಳ್ಳುಸಜ್ಜೆ ಕಳೆ ನಿಯಂತ್ರಣಕ್ಕೆ 'ಮೆಸೋಟ್ರೇನ್ ಆಟ್ರಾಜಿನ್' ಔಷಧ ಸಿಂಪಡಿಸಿದರೆ ಕಳೆ ನಿಯಂತ್ರಣಕ್ಕೆ ಬರುತ್ತದೆ. ಈಗಾಗಲೇ ಈ ಪ್ರಯೋಗವನ್ನು ಬಳಸಿದ ರೈತರು ಕಳೆ ನಿಯಂತ್ರಣ ಆಗಿರುವ ಬಗ್ಗೆ ತಿಳಿಸಿದ್ದಾರೆ. ಸಂಶೋಧನೆ ಸಂಪೂರ್ಣ ಮುಗಿದ ನಂತರ ಹೆಚ್ಚಿನ ಮಾಹಿತಿಯನ್ನು ರೈತರಿಗೆ ನೀಡಲಾಗುವುದು' ಎಂದರು.
ಈ ವೇಳೆ ರೈತರಾದ ಸಿಂಗಟಗೆರೆ ರಾಕೇಶ್, ಮಂಜುನಾಥ್, ಹಣಮಂತ ಇದ್ದರು.

]]>
Mon, 14 Jul 2025 10:44:13 +0530 shivuagrico
2 ಹಸು ಖರೀದಿಗೆ 2 ಲಕ್ಷದವರೆಗೆ ಸಹಾಯಧನ ಸೇರಿದಂತೆ ಪಶುಸಂಗೋಪನಾ ಇಲಾಖೆ ಯೋಜನೆಗಳು&Vetarnary department schemes  https://krushirushi.in/Vetarnary-department-schemes-2219 https://krushirushi.in/Vetarnary-department-schemes-2219 2 ಹಸು ಖರೀದಿಗೆ 2 ಲಕ್ಷದವರೆಗೆ ಸಹಾಯಧನ ಸೇರಿದಂತೆ ಪಶುಸಂಗೋಪನಾ ಇಲಾಖೆ ಯೋಜನೆಗಳು-Vetarnary department schemes 

ರಾಜ್ಯದ ರೈತರಿಗೆ ಆರ್ಥಿಕ ನೆರವಿಗಾಗಿ 3%
ಬಡ್ಡಿದರದಲ್ಲಿ 2 ಹಸು ಖರೀದಿ ಮಾಡಲು 2 ಲಕ್ಷವರೆಗೂ
ಸಾಲ ನೀಡಲಿ ಜಿಲ್ಲಾ ಸಹಕಾರಿ ಬ್ಯಾಂಕ್ ಅಧಿಕಾರಿಗಳಿಗೆ
ಸೂಚನೆ ನೀಡಿದ್ದೇನೆ. ಹಾಲು ವಾಹನಗಳಿಗೆ ಜಿಪಿಎಸ್
ವ್ಯವಸ್ಥೆ, ರೈತರ ಹಾಲಿನ ಗುಣಮಟ್ಟ ಎಷ್ಟಿದೆ ಎಂದು
ಸ್ಥಳದಲ್ಲೇ ತಿಳಿಸಲು ಅಗತ್ಯ ತಂತ್ರಜ್ಞಾನ
ಅಳವಡಿಸಲಾಗುತ್ತದೆ. ಇದರ ಮಾಹಿತಿಯನ್ನು ಪ್ರತಿ ನಿತ್ಯ
ನಿಮಗೆ ನೀಡಲಾಗುವುದು'' ಎಂದು ಡಿ ಕೆ ಸುರೇಶ ತಿಳಿಸಿದರು.

Dairy farming-2 ಹಸು,2 ಎಮ್ಮೆ ಖರೀದಿಗೆ 1.25 ಲಕ್ಷ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

 ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ ಹಸುಗಳಿಗೆ ಘಟಕ ವೆಚ್ಚದ ಶೇ.50 ರಷ್ಟು ಅಥವಾ ಗರಿಷ್ಟ 1.25 ಲಕ್ಷ ರೂ. ಸಹಾಯಧನ 


  • * ಎಸ್‌ಸಿ/ಎಸ್‌ಟಿ ರೈತರ ಜಮೀನುಗಳಿಗೆ ಶಾಶ್ವತ ನೀರಾವರಿ ಒದಗಿಸಲು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ 4,923 ಕೊಳವೆ ಬಾವಿಗಳನ್ನು ಕೊರೆಸಲು ಅನುಮತಿ


ಉಚಿತ ಹಾಲು ಕರೆಯುವ ಯಂತ್ರ,ರಬ್ಬರ್ ಮ್ಯಾಟ್,ಸೈಲೆಜ್ ಬ್ಯಾಗ್ ವಿತರಣೆಗೆ ಅರ್ಜಿ ಆಹ್ವಾನ-Free milking machine,cow mat,silage bag


2024-25 ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿಯಲ್ಲಿ ಹಾಲು ಕರೆಯುವ ಯಂತ್ರ(Milking machine), ರಬ್ಬರ್ ನೆಲಹಾಸು(Rubber mat) ಹಾಗೂ ಸೈಲೇಜ್ ಬ್ಯಾಗ್ಗಳನ್ನು(Silage bag) ವಿತರಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ(Vetarnary department)ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಾಲು ಕರೆಯುವ ಯಂತ್ರ  ತಲಾ 1 ರಂತೆ, ರಬ್ಬರ್ ನೆಲಹಾಸು ತಲಾ 2 ರಂತೆ ಹಾಗೂ ಸೈಲೇಜ್ ಬ್ಯಾಗ್ ತಲಾ 100 ಕೆಜಿ ಸಾಮರ್ಥ್ಯದ 1 ಹಾಗೂ 500 ಕೆಜಿ ಸಾಮರ್ಥ್ಯದ 1 ಬ್ಯಾಗ್ ಅನ್ನು ನೀಡಲಾಗುತ್ತದೆ. ಸದರಿ ಫಲಾನುಭವಿಗಳ ಆಯ್ಕೆಯಲ್ಲಿ ರೋಸ್ಟರ್ ನಿಯಾಮಾನುಸಾರದ ಕ್ರಮ ವಹಿಸಲಿದ್ದು, ಆಸಕ್ತರು ತಮ್ಮ ಸ್ಥಳೀಯ ಪಶುವೈದ್ಯಾಧಿಕಾರಿಗಳಿಂದ/ಮುಖ್ಯ ಪಶುವೈದ್ಯಾಧಿಕಾರಿಗಳು ಇವರಿಂದ ಅರ್ಜಿ ನಮೂನೆಯನ್ನು ಪಡೆದು ಎಲ್ಲಾ ದಾಖಲಾತಿಗಳೊಂದಿಗೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮುಖ್ಯ ಪಶು ವೈದ್ಯಾಧಿಕಾರಿಗಳ ಈ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming 

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು(Cow) ಅಥವಾ ಎಮ್ಮೆ(Buffelow) ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್‌ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.


ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Vetarnary department schemes 2025-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?

ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ


ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.

ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.


ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು

ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.


ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.


ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.

ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.


ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.

ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್‌ಗಳನ್ನಾಗಿ i ಮೇಲ್ದರ್ಜೆಗೇರಿಸಲಾಗುವುದು.


ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahvs.karnataka.gov.in/info-2/Schemes+&+Benefits/kn

National livestock mission 2024-ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆ,ಕುರಿ,ಕೋಳಿ,ಮೇಕೆ,ಹಂದಿ ಸಾಕಾಣೆಕೆಗೆ ಅರ್ಜಿ ಆಹ್ವಾನ

ಈ ಕಾರ್ಯಕ್ರಮದಡಿ ಗ್ರಾಮೀಣ ಕೋಳಿ ಉದ್ಯಮಶೀಲತೆ, ಕುರಿ, ಮೇಕೆ, ಹಂದಿ ಸಾಕಾಣಿಕೆ ಮತ್ತು ರಸಮೇವು ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯಬಹುದಾಗಿದೆ.

National livestock mission 


ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹೊಸ
ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಅಭಿಯಾನ

(ದನ/ಎಮ್ಮೆ, ಕುರಿ/ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗಾಗಿ)


 ಕೇಂದ್ರ ಸರ್ಕಾರದ ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯನ್ವಯ (ಕೆ,ಸಿ,ಸಿ) ಈ ಕೆಳಗಿನ ಪಶುಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟಿçಕೃತ ಬ್ಯಾಂಕ್ / ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಹೊಸ ಕಿಸಾನ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.


 ಆಸಕ್ತ ರೈತಾಪಿ ವರ್ಗದವರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಯನ್ನು ಪಡೆದು ಸಲ್ಲಿಸಬಹುದಾಗಿದೆ.

ಅವಶ್ಯಕ ದಾಖಲಾತಿಗಳು :-

1)ಆಧಾರ,

2)ಪಹಣಿ ಪತ್ರ

3)ಬ್ಯಾಂಕ್‌ಖಾತೆ ಸಂಖ್ಯೆ,

ಬ್ಯಾಂಕಿನ ಹೆಸರು, ಶಾಖೆ ಮತ್ತು ಐ.ಎಫ್.ಎಸ್.ಸಿ. ಕೊಡ್ ನೊಂದಿಗೆ ಬ್ಯಾಂಕ್ ಖಾತೆ ವಿವರಗಳು ಮತ್ತು

4)ಭಾವ ಚಿತ್ರ.



ಕ್ರ.ಸಂ 

ಘಟಕ 

ಸೌಲಭ್ಯಗಳ ವಿವರ

 

 ಹೈನುಗಾರಿಕೆ 

 

1

ಮಿಶ್ರತಳಿ ದನಗಳ ನಿರ್ವಹಣೆ (1+1)

ಪ್ರತಿ ಹಸುವಿಗೆ ಗರಿಷ್ಠ ರೂ.14,000/-ರಂತೆ ಒಟ್ಟೂ ಎರಡು ಹಸುಗಳಿಗೆ ರೂ.28,000/-ಸಾಲ ಸೌಲಭ್ಯ

 

ಆ. ಸುಧಾರಿತ ಎಮ್ಮೆಗಳ ನಿರ್ವಹಣೆ 
 (1+1)

ಪ್ರತಿ ಎಮ್ಮೆಗೆ ಗರಿಷ್ಠ ರೂ.16,000/-ರಂತೆ ಒಟ್ಟೂ ಎರಡು ಎಮ್ಮೆಗಳಿಗೆ ರೂ.32.000/-ಸಾಲ ಸೌಲಭ್ಯ

 

 ಕುರಿ ಸಾಕಾಣಿಕೆ 

 

2

ಕುರಿಗಳ ನಿರ್ವಹಣೆ (10+01)

 ಕಟ್ಟಿಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.12,000/-ರಂತೆ ಸಾಲ ಸೌಲಭ್ಯ

 

ಕುರಿಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಕುರಿಗಳಿಗೆ ರೂ.48,000/-ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಕುರಿಗಳಿಗೆ ರೂ.24,000/-ರಂತೆ ಸಾಲ ಸೌಲಭ್ಯ

 

ಟಗರುಗಳ ನಿರ್ವಹಣೆ (10)

ರೂ. 13,000 ರಂತೆ ಸಾಲ ಸೌಲಭ್ಯ

 

 ಟಗರುಗಳ ನಿರ್ವಹಣೆ (20)

ರೂ. 26,000 ರಂತೆ ಸಾಲ ಸೌಲಭ್ಯ

 

ಮೇಕೆ ಸಾಕಾಣಿಕೆ 

 

3

ಮೇಕೆಗಳ ನಿರ್ವಹಣೆ (10+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 24,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,13,000/- ರಂತೆ ಸಾಲ ಸೌಲಭ್ಯ

 

ಮೇಕೆಗಳ ನಿರ್ವಹಣೆ (20+01)

ಕಟ್ಟಿಮೇಯಿಸುವ ಮೇಕೆಗಳಿಗೆ ರೂ, 48,000/- ರಂತೆ ಹಾಗೂ ಬಯಲಿನಲ್ಲಿ ಮೇಯಿಸುವ ಮೇಕೆಗಳಿಗೆ ರೂ,26,000/- ರಂತೆ ಸಾಲ ಸೌಲಭ್ಯ

4

ಹಂದಿ ಸಾಕಾಣಿಕೆ (10)

ರೂ,60,000 ರಂತೆ ಸಾಲ ಸೌಲಭ್ಯ

 

           ಕೋಳಿ ಸಾಕಾಣಿಕೆ 

 

5

ಮಾಂಸದ ಕೋಳಿ ಸಾಕಾಣಿಕೆ

2000 ಕೋಳಿಗಳಿಗೆ ಗರಿಷ್ಠ ರೂ, 1,60,000/-ರ ವರೆಗೆ ಸಾಲ ಸೌಲಭ್ಯ

 

 ಮೊಟ್ಟೆ ಕೋಳಿ ಸಾಕಾಣಿಕೆ

1000 ಕೋಳಿಗಳಿಗೆ ಗರಿಷ್ಠ ರೂ, 1,80,000/-ರ ವರೆಗೆ ಸಾಲ ಸೌಲಭ್ಯ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರು/ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ನಿರ್ದೇಶಕರಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಸಂಪರ್ಕಿಸಬಹುದಾಗಿದೆ.

ಈ ಮಾಹಿತಿ ನಿಮಗೆ ಉಪಯೋಗವಾಗಿದ್ದರೆ ಬೇರೆಯವರಿಗೂ ಹಂಚಿಕೊಳ್ಳಿ ಧನ್ಯವಾದಗಳು

]]>
Mon, 14 Jul 2025 07:53:14 +0530 shivuagrico
ಮಿನಿ ಟ್ರ್ಯಾಕ್ಟರ್ ಸೇರಿದಂತೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ&National horticulture mission&2025 https://krushirushi.in/National-horticulture-mission-2025 https://krushirushi.in/National-horticulture-mission-2025 ಮಿನಿ ಟ್ರ್ಯಾಕ್ಟರ್ ಸೇರಿದಂತೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಗಳಿಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-National horticulture mission-2025

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಕೃಷಿಹೊಂಡ, ಪ್ಯಾಕ್‌ಹೌಸ್, ಟ್ರ್ಯಾಕ್ಟರ್(Tractor) 20 ಪಿಟಿಒ ಎಚ್‌ಪಿ ಒಳಗಿನ ಪ್ರಾಥಮಿಕ ಸಂಸ್ಕರಣಾ ಘಟಕ ಮತ್ತು ಎಸ್.ಎಂ.ಎ.ಎಂ. ಯೋಜನೆಯಡಿಯಲ್ಲಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ ಹಾಗೆ ಫೈಬರ್ ದೋಟಿ(ಅಡಿಕೆ ಕಟಾವು ಮಾಡಲು) ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


 ತಾಲ್ಲೂಕಿನ ಆಸಕ್ತ ರೈತರು ಅರ್ಜಿಯೊಂದಿಗೆ ತಮ್ಮ ಜಮೀನಿನ ಪಹಣಿ, ಆಧಾ‌ರ್ ಕಾರ್ಡ್ ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಲ್ಲಾ ಪಂಚಾಯಿತಿ) ಕಚೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Horticulture department schemes-ತೋಟಗಾರಿಕೆ ಇಲಾಖೆಯಲ್ಲಿರುವ ವಿವಿಧ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ(Horticulture department)ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳನ್ನು ಚೆಕ್ ಮಾಡಿ

https://horticulturedir.karnataka.gov.in/info-2/Facilities+available+to+farmers/kn

ವಿವಿಧ ಯೋಜನೆಗಳು:

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ:

ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೆÇೀಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:
ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಯಾಕ್‍ಹೌಸ್ ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ:
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.75 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ:

ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಮತ್ತು ಬೈಯೋಡೈಜಿಸ್ಟರ್ ಮತ್ತು ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಸಹ ಅರ್ಜಿ ಆಹ್ವಾನಿಸಲಾಗಿದೆ.

ಮೇಲ್ಕಂಡ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಲಾಗಿದೆ. ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.

]]>
Sun, 13 Jul 2025 10:12:54 +0530 shivuagrico
Punarvasu male nakshtra&ಪುನರ್ವಸು ಮಳೆ ಬಂದು ಪಂಚಾಂಗ ಓದಾಯ್ತು,ಎಳೆಕರು ರಾಸಾಯ್ತು https://krushirushi.in/Punarvasu-male-nakshtra-2217 https://krushirushi.in/Punarvasu-male-nakshtra-2217 Punarvasu male nakshtra-ಪುನರ್ವಸು ಮಳೆ ಬಂದು ಪಂಚಾಂಗ ಓದಾಯ್ತು,ಎಳೆಕರು ರಾಸಾಯ್ತು

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಮೈಸೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.


ಈಗಿನಂತೆ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ ಕೊಡಗು ಜಿಲ್ಲೆ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.


ದಕ್ಷಿಣ ಒಳನಾಡಿನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.


ಈಗಿನಂತೆ ಮುಂದಿನ 2 ದಿವಸಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆಗಳಿದ್ದು, ನಂತರ ಕಡಿಮೆಯಾಗಬಹುದು. ಜುಲೈ 16ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಮುಂಗಾರು ಮಾರುತಗಳು ಶ್ರೀಲಂಕಾ ಕರಾವಳಿ ಮೂಲಕ ಸಾಗಿಬಂದು ತಮಿಳುನಾಡು ಕರಾವಳಿಗೆ ನುಗ್ಗುತ್ತಿರುವುದರಿಂದ ತಮಿಳುನಾಡು ಭಾಗದಿಂದ ಬರುತ್ತಿರುವ ಮೋಡಗಳಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

Male nakshatragalu-2025ನೇ ಸಾಲಿನ ಮಳೆ ನಕ್ಷತ್ರಗಳು,ಮಳೆ ದಿನಾಂಕ ಹಾಗೂ ಗಾದೆಮಾತುಗಳು


2025 ನೇ ಸಾಲಿನ ಮಳೆ ನಕ್ಷತ್ರಗಳು(Male nakshatragalu)

1.ಅಶ್ವಿನಿ-

ದಿನಾಂಕ-14-4-2025

ಸಾಮಾನ್ಯ ಮಳೆ

ಗಾದೆ-ಅಶ್ವಿನಿ ಮಳೆ ಬಿದ್ದರೆ ಅರಿಶಿಣಕ್ಕೆ ಮೇಲು, ಅಶ್ವೀನಿ ಸನ್ಯಾಸಿನೀ,

2.ಭರಣಿ

ದಿನಾಂಕ-28-4-2025

ಸಾಮಾನ್ಯ ಮಳೆ

ಗಾದೆ-ಭರಣಿಯಲ್ಲಿ ಮಳೆಯಾದರೆ ಧರಣಿಯೆಲ್ಲಾ ಬೆಳೆ,ಭರಣಿ ಸುರಿದರೆ ಧರಣಿ ಬದುಕೀತು

3.ಕೃತಿಕಾ

ದಿನಾಂಕ-11-5-2025

ಸಾಮಾನ್ಯ ಮಳೆ

ಗಾದೆ-ಕೃತಿಕ ನಕ್ಷತ್ರ ಕಾದರೆ ಗದ್ದೆಗೆ ಒಳ್ಳೆಯದು

4.ರೋಹಿಣಿ-

ದಿನಾಂಕ-25-5-2025

ಉತ್ತಮ ಮಳೆ

 ಗಾದೆ-ರೋಹಿಣಿ ಮಳೆ ಓಣಿಯೆಲ್ಲಾ ಕೆಸರು

5.ಮೃಗಶಿರ

ದಿನಾಂಕ-ಜೂನ್ 8 ರಿಂದ ಜೂನ್ 21ರವರೆಗೆ

ಉತ್ತಮ ಮಳೆ

ಗಾದೆ-ಮೃಗಶಿರೆಯಲ್ಲಿ ಮಿಸುಕಾಡದೆ ನೆರೆ ಬಂತು

6.ಆರಿದ್ರಾ

ದಿನಾಂಕ(ಜೂನ್ 22 ರಿಂದ ಜುಲೈ 4ರವರೆಗೆ)

ಉತ್ತಮ ಮಳೆ

ಗಾದೆ-ಆರಿದ್ರಾ ಮಳೆ ಆಗದೆ ಗುಡುಗಿದರೆ ಆರು ಮಳೆ ಆಗಲ್ಲ, ಆರಿದ್ರಾ ಮಳೆ ಆರದೆ ಹುಯ್ಯುತ್ತೇ, ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಅಮ್ಮನ ಮನಸ್ಸು ಬೆಲ್ಲದ ಹಾಗೆ, ಆರಿದ್ರಾ ಹನಿ ಕಲ್ಲಿನ ಹಾಗೆ.

7.ಪುನರ್ವಸು

ದಿನಾಂಕ-6-7-2025

ಉತ್ತಮ ಮಳೆ

ಗಾದೆ: ಪುನವ೯ಸು ಮಳೆ ಬಂದು ಪಂಚಾಂಗ ಓದಾಯ್ತು, ಎಳೆ ಕರು ರಾಸಾಯ್ತು. 

8.ಪುಷ್ಯ

ದಿನಾಂಕ-20-7-2025

ಉತ್ತಮ ಮಳೆ

ಗಾದೆ: ಪುಷ್ಯ ಮಳೆ ಭಾಷೆ ಕೂಟ್ಟ ಮಳೆ (ತಪ್ಪಿಸುವುದಿಲ್ಲ)  ಪುಷ್ಯದಲಿ ನೆಟ್ಟ ಗಿಡ ಪುಟುಗೋಸಿ ಆದೀತು.

9.ಆಶ್ಲೇಷ

ದಿನಾಂಕ-ಆಗಸ್ಟ್ 3 ರಿಂದ ಆಗಸ್ಟ್ 15ರವರೆಗೆ

ಗಾದೆ-ಆಶ್ಲೆ ಮಳೆ ಭೂಮಿ ಹಸ್ರುಗಟ್ಟಂಗೆ ಹುಯ್ತದೆ, ಅಸಲೆ ಮಳೆ ಕೈತುಂಬಾ ಬೆಳೆ, ಅಸಲೆ ಮಳೆ ಬಿದ್ದು ಸಸಿಲೆ(ಸಣ್ಣ ಮೀನು) ಬೆಟ್ಟಕ್ಕೇರಿತು

10.ಮಘ

ದಿನಾಂಕ-ಆಗಸ್ಟ್ 17 ರಿಂದ ಆಗಸ್ಟ್ 29ರವರೆಗೆ

ಉತ್ತಮ ಮಳೆ

ಗಾದೆ-ಬಂದರೆ ಮಗೆ ಹೋದರೆ ಹೊಗೆ, ಬಂದರೆ ಮಘೆ ಇಲ್ಲದಿದ್ದರೆ ಧಗೆ, ಮಘೆ ಮಳೆ ಬಂದಷ್ಟು ಒಳ್ಳೇದು, ಮನೆಮಗ ಉಂಡಷ್ಟು ಒಳ್ಳೇದು.

11.ಹುಬ್ಬ

ದಿನಾಂಕ-31-8-2025

ಉತ್ತಮ ಮಳೆ

ಗಾದೆ-ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.  ಹುಬ್ಬೆ ಮಳೆ ಅಬ್ಬೇ ಹಾಲು ಉಂಡಂತೆ

12.ಉತ್ತರ

ದಿನಾಂಕ-13-09-2025

ಉತ್ತಮ ಮಳೆ

ಗಾದೆ-ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ. ಉತ್ತರ ಎದುರುತ್ತರದ ಮಳೆ

13.ಹಸ್ತ

ದಿನಾಂಕ-27-9-2025

ಉತ್ತಮ ಮಳೆ

14.ಚಿತ್ತ

ದಿನಾಂಕ-11-10-2025

ಉತ್ತಮ ಮಳೆ

ಗಾದೆ-ಕುರುಡು ಚಿತ್ತೆ ಎರಚಿದತ್ತ ಬೆಳೆ.

15.ಸ್ವಾತಿ

ದಿನಾಂಕ-24-10-2025

ಉತ್ತಮ ಮಳೆ

ಗಾದೆ-ಸ್ವಾತಿ ಮಳೆ ಮುತ್ತಿನ ಬೆಳೆ.

16.ವಿಶಾಖ

ದಿನಾಂಕ-6-11-2025

ಉತ್ತಮ ಮಳೆ

ಗಾದೆ-ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs  ಪ್ರಾರಂಭಿಸಿದ್ದು,ಚಾನಲ್ subscribe ಮಾಡಿ ಮತ್ತು ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in  website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.     

https://krushirushi.in/contact-us


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ

]]>
Sat, 12 Jul 2025 06:54:37 +0530 shivuagrico
Bele vime&ಇನ್ನು ಮುಂದೆ ವಾರದೊಳಗೆ ಬೆಳೆ ವಿಮೆ ಪರಿಹಾರ&ಕೃಷಿ ಸಚಿವ ಚೆಲುವರಾಯಸ್ವಾಮಿ https://krushirushi.in/Bele-vime-2216 https://krushirushi.in/Bele-vime-2216 Bele vime-ಇನ್ನು ಮುಂದೆ ವಾರದೊಳಗೆ ಬೆಳೆ ವಿಮೆ ಪರಿಹಾರ-ಕೃಷಿ ಸಚಿವ ಚೆಲುವರಾಯಸ್ವಾಮಿ

ವಾರದಲ್ಲಿ ವಿಮೆ ಹಣ ಜಮಾ: 'ಬೆಳೆ ವಿಮೆ' 
ಪರಿಹಾರ ಮೊತ್ತ ವಿಳಂಬವಾಗುತ್ತಿರುವುದಕ್ಕೆ ಹೆಚ್ಚಿನ ಕರೆಗಳ ಬಂದವು. ರಾಣೆಬೆನ್ನೂರು ತಾಲೂಕಿನ ಜೋಯಿಸರ ಹಳ್ಳಿಯ ಶಂಕರಪ್ಪ ರಾಮಪ್ಪ, ಕಲಬುರಗಿಯ ಬಾಬು ಸಾಬ್ ಪಾಟೀಲ್, ಶಿರಾ ತಾಲೂಕಿನ ತಿಮ್ಮರಾಜು, ವಿಜಯಪುರದ ಹನುಮಂತ, ರಾಯಚೂರು ಮಾನ್ವಿ ತಾಲೂಕಿನ ಮಿರಾಜುದ್ದೀನ್, ಗೌರಿಬಿದನೂರು ತಾಲೂಕಿನ ಸತೀಶ್ ಸೇರಿದಂತೆ ಇನ್ನೂ ಕೆಲವರು ಪ್ರಸ್ತಾಪಿಸಿದ ಬೆಳೆ ವಿಮೆ ಸೂಕ್ತ ಸಮಯಕ್ಕೆ ಬಾರದಿರುವ ವಿಚಾರಕ್ಕೆ ಸಚಿವರು ಸ್ಪಂದಿಸಿದರು. 



"ಸಮೀಕ್ಷೆ ನಡೆಸಿ ಬೆಳೆ ಹಾನಿಯಾಗಿರುವುದು ಖಾತರಿಯಾಗಷ್ಟೇ ಬೆಳೆ ವಿಮೆ ಪರಿಹಾರ ನೀಡಲಾಗುತ್ತದೆ. ಈಗಾಗಲೇ ಬೆಳೆ ವಿಮೆ ಹಣ ರೈತರ ಖಾತೆಗೆ ಜಮೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕಳೆದ ವರ್ಷದ ಬೆಳೆ ವಿಮೆ ಪರಿಹಾರ ವಾರರೊಳಗೆ ರೈತರ ಖಾತೆಗೆ ಜಮೆಯಾಗಲಿದೆ. ಕಲಬುರಗಿಯಲ್ಲಿ ಕಳೆದ ಅಕ್ಟೋಬ‌ರ್-ನವೆಂಬರ್ ನಲ್ಲಿ ಆದ ಬೆಳೆಹಾನಿಗೆ 600 ಕೋಟಿ ಪರಿಹಾರ ನೀಡಲಾಗಿದೆ ಎಂದು ಹೇಳಿದರು.

 ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Fri, 11 Jul 2025 07:41:55 +0530 shivuagrico
PMFME ಯೋಜನೆಯಡಿ ರೊಟ್ಟಿ ಮಶೀನ್,ಹಿಟ್ಟಿನ ಗಿರಣೆ,ಎಣ್ಣಿ ಗಾಣ,ಬೆಲ್ಲದ ಗಾಣ,ಖಾರದ ಪುಡಿ,ಶಾವಿಗೆ,ಬೇಕರಿ,ಕುರಿ,ಕೋಳಿ ಫುಡ್ ತಯಾರಿಕೆಗೆ 15 ಲಕ್ಷ ಸಬ್ಸಿಡಿ&PMFME subsidy scheme https://krushirushi.in/PMFME-2215 https://krushirushi.in/PMFME-2215 PMFME ಯೋಜನೆಯಡಿ ರೊಟ್ಟಿ ಮಶೀನ್,ಹಿಟ್ಟಿನ ಗಿರಣೆ,ಎಣ್ಣಿ ಗಾಣ,ಬೆಲ್ಲದ ಗಾಣ,ಖಾರದ ಪುಡಿ,ಶಾವಿಗೆ,ಬೇಕರಿ,ಕುರಿ,ಕೋಳಿ ಫುಡ್ ತಯಾರಿಕೆಗೆ 15 ಲಕ್ಷ ಸಬ್ಸಿಡಿ-PMFME subsidy scheme

ಕರ್ನಾಟಕದಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗಾಗಿ PMFME ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸುವ ಸಭೆಯನ್ನು ಇಂದು ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಯಿತು.

ಈ ಯೋಜನೆ ಅಡಿಯಲ್ಲಿ ಸಿರಿಧಾನ್ಯಗಳು, ಬೆಲ್ಲ, ಬೇಕರಿ ಉತ್ಪನ್ನಗಳು ಸೇರಿದಂತೆ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಶೇ. 50 ಅಥವಾ ಗರಿಷ್ಠ ₹15 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತಿದೆ. ಇದರಲ್ಲಿ ಕೇಂದ್ರದ ₹6 ಲಕ್ಷ ಮತ್ತು ರಾಜ್ಯದ ₹9 ಲಕ್ಷ ಪಾಲು ಸೇರಿದ್ದು, ವೈಯಕ್ತಿಕ ಉದ್ದಿಮೆದಾರರು, ಗುಂಪುಗಳು ಮತ್ತು ಸ್ವಸಹಾಯ ಸಂಘಗಳಿಗೆ ಇದು ವರದಾನವಾಗಿದೆ. ಸ್ವಸಹಾಯ ಸಂಘಗಳ ಸದಸ್ಯರಿಗೆ ₹40,000 ವರೆಗೆ ಬೀಜ ಬಂಡವಾಳ ಮತ್ತು ಸಂಘಗಳಿಗೆ ₹4 ಲಕ್ಷದ ವರೆಗೆ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ.

ಕೃಷಿಕರನ್ನು ಉದ್ಯಮಿಗಳನ್ನಾಗಿ ಪರಿವರ್ತಿಸುವ ಗುರಿ ಹೊಂದಿರುವ ಕೆಪೆಕ್, ಈ ಯೋಜನೆಯಡಿ ಕರ್ನಾಟಕದಲ್ಲಿ 11,910 ಉದ್ಯಮಗಳನ್ನು ಸ್ಥಾಪಿಸಲು/ಉನ್ನತೀಕರಿಸಲು ₹493 ಕೋಟಿ ಅನುದಾನ ಮೀಸಲಿಟ್ಟಿದೆ. ಇದು ವೈಯಕ್ತಿಕ ಉದ್ಯಮಿಗಳಿಗೆ 35% (60:40) ಸಬ್ಸಿಡಿ ಜೊತೆಗೆ ಕರ್ನಾಟಕ ಸರ್ಕಾರದಿಂದ 15% ಹೆಚ್ಚುವರಿ ಟಾಪ್-ಅಪ್ ಸಬ್ಸಿಡಿ ನೀಡುತ್ತದೆ.

ಈಗಾಗಲೇ 6,585 ಅರ್ಜಿಗಳಿಗೆ ಸಾಲ ಮಂಜೂರಾಗಿದ್ದು, ₹756.48 ಕೋಟಿ ಬಂಡವಾಳ ಹೂಡಿಕೆಯಾಗಿದೆ. 4,489 ಫಲಾನುಭವಿಗಳಿಗೆ ₹162.50 ಕೋಟಿ ಸಹಾಯಧನ ಹಾಗೂ 3,770 ಫಲಾನುಭವಿಗಳಿಗೆ ₹59.48 ಕೋಟಿ ಹೆಚ್ಚುವರಿ ಸಹಾಯಧನ ಬಿಡುಗಡೆ ಮಾಡಲಾಗಿದೆ. ಜೊತೆಗೆ, 5 ಬ್ರ್ಯಾಂಡಿಂಗ್ ಮಾರ್ಕೆಟಿಂಗ್ ಪ್ರಸ್ತಾವನೆಗಳು, 4 ಸಾಮಾನ್ಯ ಮೂಲಭೂತ ಸೌಕರ್ಯ ಘಟಕಗಳು ಮತ್ತು 14 ಇನ್ಕ್ಯುಬೇಷನ್ ಕೇಂದ್ರಗಳನ್ನು ಸ್ಥಾಪಿಸಿ, ರಾಜ್ಯದಲ್ಲಿ ಆಹಾರ ಸಂಸ್ಕರಣಾ ವಲಯದ ಬೆಳವಣಿಗೆಗೆ ಆದ್ಯತೆ ನೀಡಲಾಗುತ್ತಿದೆ.

#PMFME #FoodProcessing #Agriculture #Empowerment #KEPEC #Farmers #SelfHelpGroups

ಪಿಎಂಎಫ್ಎಮ್ ಇ ಯೋಜನೆಯಡಿ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಅರ್ಜಿ ಆಹ್ವಾನ-pmfme subsidy scheme 

ಯಾವ ಯಾವ ಉದ್ಯಮ ಮಾಡಬಹುದು?
 ರೊಟ್ಟಿ ಮಾಡುವ ಯಂತ್ರ, ಎಣ್ಣೆಗಾಣ, ಬೆಲ್ಲದ ಗಾಣ, ಕಾರದಪುಡಿ ಘಟಕ, ಶಾವಿಗೆ, ಹಪ್ಪಳ-ಸಂಡಿಗೆ, ಹಿಟ್ಟಿನ ಗಿರಣಿ, ಬೇಕರಿ ಉತ್ಪನ್ನ, ಹಾಲಿನ ಉತ್ಪನ್ನ, ಉಪ್ಪಿನಕಾಯಿ ಸೇರಿದಂತೆ ಕಿರು ಆಹಾರ ಸಂಸ್ಕರಣೆ

 ಅರ್ಜಿ ಸಲ್ಲಿಸುವುದು ಹೇಗೆ?
 ಅರ್ಜಿ ಸಲ್ಲಿಸುವವರು http://mofpi.nic.in/pmfme/ ಪೋರ್ಟಲ್ ನಲ್ಲಿ ವಿವರಗಳನ್ನು ಭರ್ತಿ ಮಾಡಬೇಕು ಅಥವಾ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಮೂಲಕ ಕೂಡ ಅರ್ಜಿ ವಿವರಗಳನ್ನು ಭರ್ತಿ ಮಾಡಿಸಬಹುದು. ಜಿಲ್ಲಾ ಮಟ್ಟದಲ್ಲಿ ನೇಮಿಸಲ್ಪಟ್ಟ ಸಂಪನ್ಮೂಲ ವ್ಯಕ್ತಿಗಳು(District resource person) ಅರ್ಜಿ ಹಾಗೂ ಯೋಜನಾ ವರದಿ(Detail project report) ಪರಿಶೀಲಿಸಿ ಜಿಲ್ಲಾ ಮಟ್ಟದ ಸಮಿತಿಗೆ ಸಲ್ಲಿಸುತ್ತಾರೆ. ಸಮಿತಿ ಅಧ್ಯಕ್ಷರು ಜಂಟಿ ಕೃಷಿ ನಿರ್ದೇಶಕ ರಾಗಿದ್ದು, ಸದರಿ ಅರ್ಜಿಗಳನ್ನು ಸಮಿತಿಯಲ್ಲಿಟ್ಟು ಅರ್ಹ ಫಲಾನುಭವಿಗಳ ಆಯ್ಕೆ ಮಾಡಿಕೊಂಡು, ಬ್ಯಾಂಕ್ಗಳಿಗೆ ಸಾಲ ಮಂಜೂರಾತಿಗಾಗಿ ಕಳುಹಿಸುತ್ತಾರೆ. ಸಂಸ್ಥೆಗಳ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಸಮಿತಿಯು ನೋಡಲ ಏಜೆನ್ಸಿಗೆ ವರ್ಗಾಯಿಸುತ್ತದೆ ಹಾಗೂ ಅರ್ಜಿದಾರರಿಗೆ ಮಾಹಿತಿ ನೀಡಲು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸಹಕರಿಸುತ್ತಾರೆ. ಒಂದು ವೇಳೆ ಅರ್ಜಿಗಳು ಸಂಸ್ಥೆಗಳಿಂದ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಮಟ್ಟದ ಸಮಿತಿ ವರದಿ ಸಲ್ಲಿಸುತ್ತದೆ.ರಾಜ್ಯ ಮಟ್ಟದ ಸಮಿತಿಗೆ ಸಲ್ಲಿಸುತ್ತದೆ. 15 ಲಕ್ಷಕ್ಕೂ ಹೆಚ್ಚು ಸಹಾಯಧನ ಬೇಕಾಗಿದ್ದಲ್ಲಿ ಸದರಿ ಅರ್ಜಿಗಳನ್ನು ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ಯಮಗಳ ಮಂತ್ರಾಲಯಕ್ಕೆ ಅನುಮೋದನೆಗಾಗಿ ಕಳುಹಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್(Aadhar card)
ಪ್ಯಾನ್ ಕಾರ್ಡ್(Pan card)
ಬ್ಯಾಂಕ್ ಪಾಸಬುಕ್(Bank passbook)

PMFME-ಕಿರು ಆಹಾರ ಉದ್ಯಮ ಸ್ಥಾಪನೆಗೆ 50% ಸಬ್ಸಿಡಿ,ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ಜಿಲ್ಲೆಗಳ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ (DRP contact number) ಸಂಪರ್ಕ ಸಂಖ್ಯೆ ತಿಳಿಯಲು ಈ ಕೆಳಗಿನ pdf download ಮಾಡಿಕೊಳ್ಳಿ
]]>
Wed, 09 Jul 2025 22:30:08 +0530 shivuagrico
Bharath band&ಇಂದು ಭಾರತ್ ಬಂದ್ ಏನಿರುತ್ತೆ? ಏನಿರಲ್ಲ? https://krushirushi.in/Bharath-band-2214 https://krushirushi.in/Bharath-band-2214
Bharath band-ಇಂದು ಭಾರತ್ ಬಂದ್ ಏನಿರುತ್ತೆ? ಏನಿರಲ್ಲ?
ನಾಳೆ ಅಂದರೆ ಜುಲೈ 9, 2025ರಂದು ದೇಶಾದ್ಯಂತ ಬ್ಯಾಂಕಿಂಗ್, ವಿಮೆ, ಕಲ್ಲಿದ್ದಲು ಗಣಿಗಾರಿಕೆ, ಹೆದ್ದಾರಿಗಳು, ನಿರ್ಮಾಣ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡುವ 25 ಕೋಟಿಗೂ ಹೆಚ್ಚು ಉದ್ಯೋಗಿಗಳು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ ನಡೆಸಲಿದು, ಈ ಕಾರಣದಿಂದಾಗಿ ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ. ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ರಾಷ್ಟ್ರ ವಿರೋಧಿ ನೀತಿಗಳನ್ನು ವಿರೋಧಿಸಿ 10 ಕೇಂದ್ರ ಕಾರ್ಮಿಕ ಸಂಘಗಳು ಮತ್ತು ಅವುಗಳ ಸಂಯೋಜಿತ ಘಟಕಗಳ ವೇದಿಕೆಯಿಂದ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಭಾರತ್‌ ಬಂದ್‌; ನಾಳೆ ಏನಿರುತ್ತೆ? ಏನಿರಲ್ಲ?

ಇನ್ನು, ಬಂದ್‌ ಎಂದಾಕ್ಷಣ ಅನೇಕ ಸಂಗತಿಗಳು ದಿನಿತ್ಯದಂತೆ ಇರುವುದಿಲ್ಲ. ಹೀಗಾಗಿ ಬಂದ್‌ ಸಮಯದಲ್ಲಿ ಮುನ್ನೆಚ್ಚರಿಕೆಯಾಗಿ ಅನೇಕ ಸೇವೆಗಳೂ ಸಹ ಬಂದ್‌ ಆಗಲಿದೆ. ಹಾಗಿದ್ದರೆ ನಾಳಿನ ಭಾರತ್‌ ಬಂದ್‌ ನಿಮಿತ್ತ ಏನಿರುತ್ತೆ? ಏನಿರಲ್ಲ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ನಾಳೆ ಏನಿರಲ್ಲ?

ನಾಳೆ ರಾಷ್ಟ್ರವ್ಯಾಪಿ ಎಲ್ಲಾ ಬ್ಯಾಂಕ್‌ಗಳು ಮುಚ್ಚುವ ಸಾಧ್ಯತೆ ಇದೆ. ಇದರಿಂದಾಗಿ ನಿಮ್ಮ ದಿನಿತ್ಯದ ಬ್ಯಾಕಿಂಗ್‌ ಕೆಲಸಗಳಿಗೆ ಸಮಸ್ಯೆ ಆಗಬಹುದು. ಹಣಕಾಸು ಚಟುವಟಿಕೆಗಳು ಸ್ಥಗಿತಗೊಳ್ಳಬಹುದು. ಇದರ ಜೊತೆಗೆ ಮುಖ್ಯವಾಗಿ ನೋಡುವುದಾದರೆ ಅಂಚೆ ಕಚೇರಿಗಳು, ಕಲ್ಲಿದ್ದಲು ಗಣಿಗಾರಿಕೆ ಘಟಕಗಳು ಮುಚ್ಚಲ್ಪಡಬಹುದು. ಸಂಚಾರದಲ್ಲಿ ಅದರಲ್ಲಿಯೂ ಸರ್ಕಾರಿ ಸಾರಿಗೆ ಹಾಗೂ ಖಾಸಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಯಾವ ರೀತಿ ಬದಲಾವಣೆ ಆಗಲಿದೆ ಎಂದು ಈವರೆಗ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಆದರೆ ಏನಾದರೂ ಈ ಬಂದ್‌ ತೀವ್ರವಾದರೆ ಆಗ ಮುನ್ನೆಚ್ಚರಿಕೆಯಾಗಿ ಸಾರಿಗೆ ವ್ಯವಸ್ಥೆ ಸಹ ಬಂದ್‌ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ನಾಳೆ ಏನಿರುತ್ತೆ?

ಇನ್ನು, ಈ ಮೇಲೆ ತಿಳಿಸಿದ ಸೇವೆಗಳು ಬಂದ್‌ ಆಗುವಸ ಸಾಧ್ಯತೆ ಇದೆ. ಆದರೆ ನಾಳಿನ ಭಾರತ್‌ ಬಂದ್ ಸಮಯದಲ್ಲಿ ಜನಸಾಮಾನ್ಯರಿಗೆ ಪ್ರಮುಖವಾಗಿ ಬೇಕಾಗಿರುವಂತಹ ರೈಲ್ವೆ, ಆರೋಗ್ಯ ಮತ್ತು ತುರ್ತು ಸೇವೆಗಳಂತಹ ಅಗತ್ಯ ಸೇವೆಗಳಿಗೆ ಈ ಮುಷ್ಕರದಿಂದ ವಿನಾಯಿತಿ ನೀಡಲಾಗಿದೆ. ದಿನಿತ್ಯದ ಹಾಲು, ಔಷಧ, ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ. ಈ ಬಂದ್‌ನಿಂದ ಬ್ಯಾಂಕ್‌ ವಹಿವಾಟು ಕಷ್ಟವಾದರೂ ಸಹ ನಿಮ್ಮ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳಾದ UPI ಮತ್ತು ನೆಟ್ ಬ್ಯಾಂಕಿಂಗ್ ಎಂದಿನಂತೆ ಕಾರ್ಯನಿರ್ವಹಿಸಲಿದೆ.

25 ಕೋಟಿಗೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ:

ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಅಮರ್‌ಜಿತ್ ಕೌರ್ ಪ್ರಕಾರ, ಈ ಮುಷ್ಕರದಲ್ಲಿ 25 ಕೋಟಿಗೂ ಹೆಚ್ಚು ಉದ್ಯೋಗಿಗಳು ಭಾಗವಹಿಸುವ ನಿರೀಕ್ಷೆಯಿದೆ. ರೈತರು ಮತ್ತು ಗ್ರಾಮೀಣ ಕಾರ್ಮಿಕರು ಸಹ ಈ ಪ್ರತಿಭಟನೆಯನ್ನು ಬೆಂಬಲಿಸಲಿದ್ದಾರೆ. ಎನ್‌ಎಂಡಿಸಿ ಲಿಮಿಟೆಡ್, ಇತರ ಖನಿಜ, ಉಕ್ಕು ಕಂಪನಿಗಳು, ರಾಜ್ಯ ಸರ್ಕಾರಿ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರು ಸಹ ಮುಷ್ಕರದಲ್ಲಿ ಭಾಗವಹಿಸುವುದಾಗಿ ವರದಿಯಾಗಿದೆ. ಯುನೈಟೆಡ್ ಕಿಸಾನ್ ಮೋರ್ಚಾ ಮತ್ತು ಕೃಷಿ ಕಾರ್ಮಿಕರ ಸಂಘಟನೆಗಳು ಸಹ ಮುಷ್ಕರವನ್ನು ಬೆಂಬಲಿಸಿವೆ.
]]>
Tue, 08 Jul 2025 21:15:12 +0530 shivuagrico
ಈ ಪಟ್ವಿಯಲ್ಲಿರುವ ಗೃಹಿಣಿಯರಿಗೆ ವಾರದೊಳಗೆ ಮೇ,ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ&Gruhalakshmi status https://krushirushi.in/Gruhalakshmi-status https://krushirushi.in/Gruhalakshmi-status ಈ ಪಟ್ವಿಯಲ್ಲಿರುವ ಗೃಹಿಣಿಯರಿಗೆ ವಾರದೊಳಗೆ ಮೇ,ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ-Gruhalakshmi status

ಗೃಹಲಕ್ಷ್ಮಿ ಯೋಜನೆಯ ಮೇ ತಿಂಗಳ ಹಣವನ್ನು ಇನ್ನೊಂದು ವಾರದಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ತಿಳಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಗೆ ಹಣಕಾಸಿನ ಸಮಸ್ಯೆ ಇಲ್ಲ.

ಒಂದು ವಾರದಲ್ಲಿ ಮೇ ತಿಂಗಳ ಹಣ ಹಾಗೂ ಜುಲೈ 15ರೊಳಗೆ ಜೂನ್ ತಿಂಗಳ ಹಣವನ್ನು ಜಮೆ ಮಾಡಲಾಗುವುದು ಎಂದು ತಿಳಿಸಿದರು.

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Mon, 07 Jul 2025 07:41:24 +0530 shivuagrico
PMFME ಯೋಜನೆಯಡಿ ರೊಟ್ಟಿ ಮಶೀನ್,ಹಿಟ್ಟಿನ ಗಿರಣೆ,ಎಣ್ಣಿ ಗಾಣ,ಬೆಲ್ಲದ ಗಾಣ,ಖಾರದ ಪುಡಿ,ಶಾವಿಗೆ,ಬೇಕರಿ,ಕುರಿ,ಕೋಳಿ ಫುಡ್ ತಯಾರಿಕೆಗೆ 15 ಲಕ್ಷ ಸಬ್ಸಿಡಿ&PMFME subsidy scheme https://krushirushi.in/PMFME-subsidy-scheme-2212 https://krushirushi.in/PMFME-subsidy-scheme-2212 PMFME ಯೋಜನೆಯಡಿ ರೊಟ್ಟಿ ಮಶೀನ್,ಹಿಟ್ಟಿನ ಗಿರಣೆ,ಎಣ್ಣಿ ಗಾಣ,ಬೆಲ್ಲದ ಗಾಣ,ಖಾರದ ಪುಡಿ,ಶಾವಿಗೆ,ಬೇಕರಿ,ಕುರಿ,ಕೋಳಿ ಫುಡ್ ತಯಾರಿಕೆಗೆ 15 ಲಕ್ಷ ಸಬ್ಸಿಡಿ-PMFME subsidy scheme

ಕರ್ನಾಟಕದಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗಾಗಿ PMFME ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸುವ ಸಭೆಯನ್ನು ಇಂದು ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಯಿತು.

ಈ ಯೋಜನೆ ಅಡಿಯಲ್ಲಿ ಸಿರಿಧಾನ್ಯಗಳು, ಬೆಲ್ಲ, ಬೇಕರಿ ಉತ್ಪನ್ನಗಳು ಸೇರಿದಂತೆ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಶೇ. 50 ಅಥವಾ ಗರಿಷ್ಠ ₹15 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತಿದೆ. ಇದರಲ್ಲಿ ಕೇಂದ್ರದ ₹6 ಲಕ್ಷ ಮತ್ತು ರಾಜ್ಯದ ₹9 ಲಕ್ಷ ಪಾಲು ಸೇರಿದ್ದು, ವೈಯಕ್ತಿಕ ಉದ್ದಿಮೆದಾರರು, ಗುಂಪುಗಳು ಮತ್ತು ಸ್ವಸಹಾಯ ಸಂಘಗಳಿಗೆ ಇದು ವರದಾನವಾಗಿದೆ. ಸ್ವಸಹಾಯ ಸಂಘಗಳ ಸದಸ್ಯರಿಗೆ ₹40,000 ವರೆಗೆ ಬೀಜ ಬಂಡವಾಳ ಮತ್ತು ಸಂಘಗಳಿಗೆ ₹4 ಲಕ್ಷದ ವರೆಗೆ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ.

ಕೃಷಿಕರನ್ನು ಉದ್ಯಮಿಗಳನ್ನಾಗಿ ಪರಿವರ್ತಿಸುವ ಗುರಿ ಹೊಂದಿರುವ ಕೆಪೆಕ್, ಈ ಯೋಜನೆಯಡಿ ಕರ್ನಾಟಕದಲ್ಲಿ 11,910 ಉದ್ಯಮಗಳನ್ನು ಸ್ಥಾಪಿಸಲು/ಉನ್ನತೀಕರಿಸಲು ₹493 ಕೋಟಿ ಅನುದಾನ ಮೀಸಲಿಟ್ಟಿದೆ. ಇದು ವೈಯಕ್ತಿಕ ಉದ್ಯಮಿಗಳಿಗೆ 35% (60:40) ಸಬ್ಸಿಡಿ ಜೊತೆಗೆ ಕರ್ನಾಟಕ ಸರ್ಕಾರದಿಂದ 15% ಹೆಚ್ಚುವರಿ ಟಾಪ್-ಅಪ್ ಸಬ್ಸಿಡಿ ನೀಡುತ್ತದೆ.

ಈಗಾಗಲೇ 6,585 ಅರ್ಜಿಗಳಿಗೆ ಸಾಲ ಮಂಜೂರಾಗಿದ್ದು, ₹756.48 ಕೋಟಿ ಬಂಡವಾಳ ಹೂಡಿಕೆಯಾಗಿದೆ. 4,489 ಫಲಾನುಭವಿಗಳಿಗೆ ₹162.50 ಕೋಟಿ ಸಹಾಯಧನ ಹಾಗೂ 3,770 ಫಲಾನುಭವಿಗಳಿಗೆ ₹59.48 ಕೋಟಿ ಹೆಚ್ಚುವರಿ ಸಹಾಯಧನ ಬಿಡುಗಡೆ ಮಾಡಲಾಗಿದೆ. ಜೊತೆಗೆ, 5 ಬ್ರ್ಯಾಂಡಿಂಗ್ ಮಾರ್ಕೆಟಿಂಗ್ ಪ್ರಸ್ತಾವನೆಗಳು, 4 ಸಾಮಾನ್ಯ ಮೂಲಭೂತ ಸೌಕರ್ಯ ಘಟಕಗಳು ಮತ್ತು 14 ಇನ್ಕ್ಯುಬೇಷನ್ ಕೇಂದ್ರಗಳನ್ನು ಸ್ಥಾಪಿಸಿ, ರಾಜ್ಯದಲ್ಲಿ ಆಹಾರ ಸಂಸ್ಕರಣಾ ವಲಯದ ಬೆಳವಣಿಗೆಗೆ ಆದ್ಯತೆ ನೀಡಲಾಗುತ್ತಿದೆ.

#PMFME #FoodProcessing #Agriculture #Empowerment #KEPEC #Farmers #SelfHelpGroups

ಪಿಎಂಎಫ್ಎಮ್ ಇ ಯೋಜನೆಯಡಿ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಅರ್ಜಿ ಆಹ್ವಾನ-pmfme subsidy scheme 

ಯಾವ ಯಾವ ಉದ್ಯಮ ಮಾಡಬಹುದು?
 ರೊಟ್ಟಿ ಮಾಡುವ ಯಂತ್ರ, ಎಣ್ಣೆಗಾಣ, ಬೆಲ್ಲದ ಗಾಣ, ಕಾರದಪುಡಿ ಘಟಕ, ಶಾವಿಗೆ, ಹಪ್ಪಳ-ಸಂಡಿಗೆ, ಹಿಟ್ಟಿನ ಗಿರಣಿ, ಬೇಕರಿ ಉತ್ಪನ್ನ, ಹಾಲಿನ ಉತ್ಪನ್ನ, ಉಪ್ಪಿನಕಾಯಿ ಸೇರಿದಂತೆ ಕಿರು ಆಹಾರ ಸಂಸ್ಕರಣೆ

 ಅರ್ಜಿ ಸಲ್ಲಿಸುವುದು ಹೇಗೆ?
 ಅರ್ಜಿ ಸಲ್ಲಿಸುವವರು http://mofpi.nic.in/pmfme/ ಪೋರ್ಟಲ್ ನಲ್ಲಿ ವಿವರಗಳನ್ನು ಭರ್ತಿ ಮಾಡಬೇಕು ಅಥವಾ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಮೂಲಕ ಕೂಡ ಅರ್ಜಿ ವಿವರಗಳನ್ನು ಭರ್ತಿ ಮಾಡಿಸಬಹುದು. ಜಿಲ್ಲಾ ಮಟ್ಟದಲ್ಲಿ ನೇಮಿಸಲ್ಪಟ್ಟ ಸಂಪನ್ಮೂಲ ವ್ಯಕ್ತಿಗಳು(District resource person) ಅರ್ಜಿ ಹಾಗೂ ಯೋಜನಾ ವರದಿ(Detail project report) ಪರಿಶೀಲಿಸಿ ಜಿಲ್ಲಾ ಮಟ್ಟದ ಸಮಿತಿಗೆ ಸಲ್ಲಿಸುತ್ತಾರೆ. ಸಮಿತಿ ಅಧ್ಯಕ್ಷರು ಜಂಟಿ ಕೃಷಿ ನಿರ್ದೇಶಕ ರಾಗಿದ್ದು, ಸದರಿ ಅರ್ಜಿಗಳನ್ನು ಸಮಿತಿಯಲ್ಲಿಟ್ಟು ಅರ್ಹ ಫಲಾನುಭವಿಗಳ ಆಯ್ಕೆ ಮಾಡಿಕೊಂಡು, ಬ್ಯಾಂಕ್ಗಳಿಗೆ ಸಾಲ ಮಂಜೂರಾತಿಗಾಗಿ ಕಳುಹಿಸುತ್ತಾರೆ. ಸಂಸ್ಥೆಗಳ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಸಮಿತಿಯು ನೋಡಲ ಏಜೆನ್ಸಿಗೆ ವರ್ಗಾಯಿಸುತ್ತದೆ ಹಾಗೂ ಅರ್ಜಿದಾರರಿಗೆ ಮಾಹಿತಿ ನೀಡಲು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸಹಕರಿಸುತ್ತಾರೆ. ಒಂದು ವೇಳೆ ಅರ್ಜಿಗಳು ಸಂಸ್ಥೆಗಳಿಂದ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಮಟ್ಟದ ಸಮಿತಿ ವರದಿ ಸಲ್ಲಿಸುತ್ತದೆ.ರಾಜ್ಯ ಮಟ್ಟದ ಸಮಿತಿಗೆ ಸಲ್ಲಿಸುತ್ತದೆ. 15 ಲಕ್ಷಕ್ಕೂ ಹೆಚ್ಚು ಸಹಾಯಧನ ಬೇಕಾಗಿದ್ದಲ್ಲಿ ಸದರಿ ಅರ್ಜಿಗಳನ್ನು ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ಯಮಗಳ ಮಂತ್ರಾಲಯಕ್ಕೆ ಅನುಮೋದನೆಗಾಗಿ ಕಳುಹಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್(Aadhar card)
ಪ್ಯಾನ್ ಕಾರ್ಡ್(Pan card)
ಬ್ಯಾಂಕ್ ಪಾಸಬುಕ್(Bank passbook)

PMFME-ಕಿರು ಆಹಾರ ಉದ್ಯಮ ಸ್ಥಾಪನೆಗೆ 50% ಸಬ್ಸಿಡಿ,ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ಜಿಲ್ಲೆಗಳ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ (DRP contact number) ಸಂಪರ್ಕ ಸಂಖ್ಯೆ ತಿಳಿಯಲು ಈ ಕೆಳಗಿನ pdf download ಮಾಡಿಕೊಳ್ಳಿ
]]>
Sun, 06 Jul 2025 09:32:27 +0530 shivuagrico
Pension amount status check&ಜುಲೈ ತಿಂಗಳ ವೃದ್ಯಾಪ್ಯ,ಅಂಗವಿಕಲ,ವಿಧವಾ ಸೇರಿದಂತೆ ಎಲ್ಲ ರೀತಿಯ ಪಿಂಚಣೆ ಹಣ ಜಮಾ https://krushirushi.in/Pension-amount-status-check-2211 https://krushirushi.in/Pension-amount-status-check-2211 Pension amount status check-ಜುಲೈ ತಿಂಗಳ ವೃದ್ಯಾಪ್ಯ,ಅಂಗವಿಕಲ,ವಿಧವಾ ಸೇರಿದಂತೆ ಎಲ್ಲ ರೀತಿಯ ಪಿಂಚಣೆ ಹಣ ಜಮಾ

ಕೇಂದ್ರ ಸರ್ಕಾರ ಇತ್ತೀಚೆಗೆ ವಿಧವಾ ಪಿಂಚಣಿ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ, ಇದು ಲಕ್ಷಾಂತರ ಮಹಿಳೆಯರಿಗೆ ಪರಿಹಾರವನ್ನು ತರುತ್ತದೆ. ಈ ಹೆಚ್ಚಳದೊಂದಿಗೆ, ಪಿಂಚಣಿ ಮೊತ್ತವನ್ನು ಗಮನಾರ್ಹವಾಗಿ ಹೆಚ್ಚಿಸಲಾಗಿದ್ದು, ಇದರಿಂದಾಗಿ ಮಹಿಳೆಯರು ಉತ್ತಮ ಆರ್ಥಿಕ ಸಹಾಯವನ್ನು ಪಡೆಯಬಹುದು.

ವಿಧವಾ ಪಿಂಚಣಿ ಯೋಜನೆಯಡಿಯಲ್ಲಿ ಪಡೆಯುವ ಮೊತ್ತವನ್ನು ಮಹತ್ತರವಾಗಿ ಹೆಚ್ಚಿಸಲಾಗಿದೆ. ಮೊದಲು ಈ ಯೋಜನೆಯಲ್ಲಿ ತಿಂಗಳಿಗೆ 500 ರಿಂದ 1000 ರೂಪಾಯಿಗಳವರೆಗೆ ಸಿಗುತ್ತಿತ್ತು ಆದರೆ ಈಗ ಅದನ್ನು ತಿಂಗಳಿಗೆ 2000 ರಿಂದ 3000 ಕ್ಕೆ ಹೆಚ್ಚಿಸಲಾಗಿದೆ. ಇದರರ್ಥ ಮಹಿಳೆಯರು ಮೊದಲಿಗಿಂತ ಹೆಚ್ಚಿನ ಆರ್ಥಿಕ ಸಹಾಯವನ್ನು ಪಡೆಯಲು ಸಾಧ್ಯವಾಗುತ್ತದೆ, ಆದರೂ ಪ್ರತಿ ರಾಜ್ಯ ಸರ್ಕಾರವನ್ನು ಅವಲಂಬಿಸಿ ಮೊತ್ತವು ಸ್ವಲ್ಪ ಬದಲಾಗಬಹುದು. ಆದರೆ ಕೇಂದ್ರ ಸರ್ಕಾರದ ಶಿಫಾರಸಿನ ನಂತರ, ಇದನ್ನು ಅನೇಕ ರಾಜ್ಯಗಳಲ್ಲಿ ಜಾರಿಗೆ ತರಲಾಗಿದ್ದು, ಇದು ಮಹಿಳೆಯರ ಜೀವನವನ್ನು ಸ್ವಲ್ಪ ಸುಲಭಗೊಳಿಸುತ್ತದೆ.

ಪ್ರಮುಖ ಬದಲಾವಣೆಗಳು

ಪಿಂಚಣಿ ಮೊತ್ತ ₹1000 ದಿಂದ ₹2000 ಕ್ಕೆ ಏರಿಕೆ.
ಈಗ ನೀವು ಪ್ರತಿ ತಿಂಗಳು ₹2000 ರಿಂದ ₹3000 ಪಡೆಯುತ್ತೀರಿ.
ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ನಿಯಮಗಳು.

ಈ ಯೋಜನೆಯ ಲಾಭವನ್ನು ಯಾರು ಪಡೆಯಬಹುದು

ಮಹಿಳೆಯ ವಯಸ್ಸು 18 ವರ್ಷಗಳು ಆಗಿರಬೇಕು.
ಮಹಿಳೆಯ ವಾರ್ಷಿಕ ಆದಾಯವು ಸರ್ಕಾರ ನಿಗದಿಪಡಿಸಿದ ಮಿತಿಗಿಂತ ಕಡಿಮೆಯಿರಬೇಕು.
ಮಹಿಳೆಗೆ ಬೇರೆ ಯಾವುದೇ ಸರ್ಕಾರಿ ಪಿಂಚಣಿ ಯೋಜನೆಯ ಲಾಭ ಸಿಗಬಾರದು
ಮಹಿಳೆಯ ಹೆಸರಿನಲ್ಲಿ ಯಾವುದೇ ದೊಡ್ಡ ಆಸ್ತಿ ಅಥವಾ ಕೃಷಿ ಭೂಮಿ ಇರಬಾರದು.
ಈ ಷರತ್ತುಗಳನ್ನು ಪೂರೈಸುವ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬಹುದು.

ಪತಿಯ ಮರಣದ ನಂತರ ಆರ್ಥಿಕವಾಗಿ ದುರ್ಬಲರಾಗಿರುವ ಮತ್ತು ಉತ್ತಮ ಜೀವನ ನಡೆಸಲು ಸಹಾಯ ಬಯಸುವ ಮಹಿಳೆಯರಿಗಾಗಿ ಈ ಯೋಜನೆ ಇದೆ.

ಅರ್ಜಿ ಸಲ್ಲಿಸುವುದು ಹೇಗೆ?

ನೀವು ಈ ಯೋಜನೆಯ ಲಾಭ ಪಡೆಯಲು ಬಯಸಿದರೆ, ಅರ್ಜಿ ಸಲ್ಲಿಸುವುದು ತುಂಬಾ ಸುಲಭ. ನೀವು ಆನ್‌ಲೈನ್ ಮತ್ತು ಆಫ್‌ಲೈನ್ ಎರಡರಲ್ಲೂ ಅರ್ಜಿ ಸಲ್ಲಿಸಬಹುದು.

ರಾಜ್ಯಗಳಾದ್ಯಂತ ಪಿಂಚಣಿ ಮೊತ್ತ

ದೇಶದ ವಿವಿಧ ರಾಜ್ಯಗಳಲ್ಲಿ ಪಿಂಚಣಿ ಮೊತ್ತವು ಬದಲಾಗಬಹುದು. ಕೆಲವು ರಾಜ್ಯಗಳ ಪಿಂಚಣಿ ಮೊತ್ತದ ಬಗ್ಗೆ ಇಲ್ಲಿದೆ ಮಾಹಿತಿ

ರಾಜ್ಯ ಹಿಂದಿನ ಮೊತ್ತ (₹) ಹೊಸ ಮೊತ್ತ (₹)
ಉತ್ತರ ಪ್ರದೇಶ 500 1500₹
ಬಿಹಾರ 600 2000₹
ರಾಜಸ್ಥಾನ 750 2500₹
ಮಧ್ಯಪ್ರದೇಶ 1000 3000₹
ಹರಿಯಾಣ 1200 2500₹
ಮಹಾರಾಷ್ಟ್ರ 800 2000₹
ಕರ್ನಾಟಕ 900 2200₹

ಎಲ್ಲಾ ರೀತಿಯ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://dssp.karnataka.gov.in/dssp/villageWise_list_Of_beneficiaries.aspx

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಅಥವಾ ಪಟ್ಟಣ select ಮಾಡಿ, ಹೊಬಳಿ,ಗ್ರಾಮ select ಮಾಡಿ,Captch type ಮಾಡಿ, Search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿ ಪಿಂಚಣಿ ಪಡೆಯುವವರ ಹೆಸರು ಸಿಗಲಿದೆ

(ಸೂಚನೆ-Desktop mode open ಮಾಡಿಕೊಳ್ಳಿ)

Pension status-ಈ ತಿಂಗಳ ನಿಮ್ಮ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://dssp.karnataka.gov.in/dssp/Beneficiary_Status.aspx

ನಂತರ ನಿಮ್ಮ ಗ್ರಾಮದ ಪಟ್ಟಿಯಲ್ಲಿ ನಿಮ್ಮ beneficiary ID ಹಾಕಿ,captcha type ಮಾಡಿ search ಮೇಲೆ ಕ್ಲಿಕ್ ಮಾಡಿ

ನಂತರ click here to get payment details from SSP portal ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ beneficiary ID ಹಾಗೂ captcha code ಹಾಕಿ search ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಇಲ್ಲಿಯವರೆಗೆ ಜಮಾ ಆದ ಪಿಂಚಣೆ ಹಣ ಮಾಹಿತಿ ದೊರೆಯಲಿದೆ

ಹೀಗೂ ಚೆಕ್ ಮಾಡಬಹುದು

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ pension ಮೇಲೆ ಕ್ಲಿಕ್ ಮಾಡಿ

ನಂತರ ಇಲ್ಲಿಯವರೆಗೂ ಜಮಾ ಆದ ಪಿಂಚಣೆ ಹಣ(pension amount)ಮಾಹಿತಿ ಸಿಗಲಿದೆ.

]]>
Sat, 05 Jul 2025 18:47:32 +0530 shivuagrico
Milk incentive status&9.07 ಲಕ್ಷ ರೈತರ ಖಾತೆಗೆ 2854 ಕೋಟಿ ಹಾಲಿನ ಪ್ರೋತ್ಸಾಹಧನ, ನಿಮಗೇಷ್ಟು ಜಮಾ ಚೆಕ್ ಮಾಡಿ https://krushirushi.in/Milk-incentive-status-2210 https://krushirushi.in/Milk-incentive-status-2210 Milk incentive status-9.07 ಲಕ್ಷ ರೈತರ ಖಾತೆಗೆ 2854 ಕೋಟಿ ಹಾಲಿನ ಪ್ರೋತ್ಸಾಹಧನ, ನಿಮಗೇಷ್ಟು ಜಮಾ ಚೆಕ್ ಮಾಡಿ

ರಾಜ್ಯದಲ್ಲಿ ಹೈನೋದ್ಯಮಕ್ಕೆ ವಿಶೇಷ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ರೈತರ ಆರ್ಥಿಕ ಸದೃಢತೆಗಾಗಿ ಹಾಲು ಉತ್ಪಾದನೆ ಮತ್ತು ಸಂಸ್ಕರಣಾ ವೆಚ್ಚಗಳನ್ನು ಪರಿಗಣಿಸಿ ನಂದಿನಿ ಹಾಲು ಮತ್ತು ಮೊಸರಿನ ದರ ಪರಿಷ್ಕರಣೆ ಮಾಡಲಾಗಿದೆ ಎಂಬುದಾಗಿ ಸರ್ಕಾರ ಸ್ಪಷ್ಟ ಪಡಿಸಿದೆ. 



ಮುಂಬರುವ ಏಪ್ರಿಲ್ 1ರಿಂದ ರಾಜ್ಯದಲ್ಲಿ ನಂದಿನಿ ಹಾಲಿನ ದರವು ₹4 ಹೆಚ್ಚಳವಾಗಲಿದ್ದು, ಇಲ್ಲಿ ಏರಿಕೆಯಾಗುವ ದರದ ಲಾಭವು ರೈತರನ್ನು ತಲುಪಲಿದೆ. ದರ ಏರಿಕೆಯ ನಂತರವೂ ಒಂದು ಲೀಟ‌ರ್ ಹಾಲಿನ ಬೆಲೆ ₹46 ಆಗಲಿದ್ದು, ಇದು ಬೇರೆಲ್ಲಾ ರಾಜ್ಯಗಳಿಗಿಂತಲೂ ಕಡಿಮೆಯಿರಲಿದೆ ಎಂದಿದೆ. 

Milk incentive status-ಇಲ್ಲಿಯವರೆಗೂ ಜಮಾ ಆಗಿರುವ ಹಾಲಿನ ಪ್ರೋತ್ಸಾಹಧನ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ "ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಪ್ರೋತ್ಸಾಹಧನ ಮಾಹಿತಿ ಸಿಗಲಿದೆ.

ಹೀಗೂ ಚೆಕ್ ಮಾಡಬಹುದು

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/Klda/MilkIncentive?ServiceId=5399&Type=TABLE&DepartmentId=3119

ನಂತರ ನಿಮ್ಮ ಜಿಲ್ಲೆ,ತಾಲೂಕು,Milk Union,ಗ್ರಾಮ, select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ನಿಮ್ಮ ಗ್ರಾಮದಲ್ಲಿ ಯಾರಿಗೆಲ್ಲಾ ಎಷ್ಟು ಹಾಲಿನ ಪ್ರೋತ್ಸಾಹಧನ(Milk incentive) ಬಂದಿದೆ ಎಂದು ತಿಳಿಯಲಿದೆ

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732

]]>
Sat, 05 Jul 2025 07:39:37 +0530 shivuagrico
Free sheep training&ಉಚಿತ ಊಟ ವಸತಿಯೊಂದಿಗೆ 13 ದಿನಗಳ ಕುರಿ ಸಾಕಾಣಿಕೆ ತರಬೇತಿ&Uchitha Kuri sakanike tharabethi https://krushirushi.in/Free-sheep-training-2209 https://krushirushi.in/Free-sheep-training-2209 Free sheep training-ಉಚಿತ ಊಟ ವಸತಿಯೊಂದಿಗೆ 13 ದಿನಗಳ ಕುರಿ ಸಾಕಾಣಿಕೆ ತರಬೇತಿ-Uchitha Kuri sakanike tharabethi

 

ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ ಹತ್ತು ದಿನಗಳ ಕಾಲ ಕುರಿ ಸಾಕಾಣಿಕೆ ತರಬೇತಿಯನ್ನು ದಿನಾಂಕ 11/08/2025 ರಿಂದ 23/08/2025 ವರೆಗೆ ಹಮ್ಮಿಕೊಳ್ಳಲಾಗಿದೆ.


ತರಬೇತಿಯಲ್ಲಿ ಕಲಿಸುವ ವಿಷಯಗಳು
1)ಕುರಿ ತಳಿಗಳು

2)ಕುರಿಗೆ  ಬರುವಂತಹ ವಿವಿಧ ರೋಗಗಳು 
3)ಕುರಿಗಳನ್ನು ಕೊಬ್ಬಿಸುವ ವಿಧಾನ 
4)ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಹಿತಿ
5)ವಿವಿಧ ಔಷಧ ಉಪಚಾರಗಳು 
6)ಕುರಿ ಶಡ್ ನಿರ್ಮಾಣ
7)ಲೋನ್ ಗಳ ಮಾಹಿತಿ 
8)ಸಬ್ಸಿಡಿಗಳ ಮಾಹಿತಿ 
9) ಪ್ರಾಜೆಕ್ಟ್ ರಿಪೋರ್ಟ್ ಮಾಹಿತಿ 
10) ಮನೆಮದ್ದುಗಳ ಮಾಹಿತಿ 

 ಇನ್ನು ಇತರೆ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು 

 ಆಸಕ್ತರು ಕೂಡಲೇ ಕೆಳಗಡೆ ನಮೂದಿಸಿದ ಮೊಬೈಲ್ ನಂಬರ್ ಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಿ 
8660219375

.

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಇರುವ ಲೀಡ್ ಬ್ಯಾಂಕ್ ತರಬೇತಿ ಕೇಂದ್ರಗಳಲ್ಲಿ ತರಭೇತಿ ಆಯೋಜಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಲೀಡ್ ಬ್ಯಾಂಕ್ ಸಂಪರ್ಕಿಸಿ

]]>
Fri, 04 Jul 2025 19:35:40 +0530 shivuagrico
Gruhalakshmi amount&ಇಲ್ಲಿಯವರೆಗೂ ನಿಮಗೆ ಎಷ್ಟು ಗೃಹಲಕ್ಷ್ಮಿ ಹಣ ಜಮಾ ಆಗಿದೆ ಚೆಕ್ ಮಾಡಿ https://krushirushi.in/Gruhalakshmi-amount-2208 https://krushirushi.in/Gruhalakshmi-amount-2208 Gruhalakshmi amount-ಇಲ್ಲಿಯವರೆಗೂ ನಿಮಗೆ ಎಷ್ಟು ಗೃಹಲಕ್ಷ್ಮಿ ಹಣ ಜಮಾ ಆಗಿದೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Fri, 04 Jul 2025 14:39:00 +0530 shivuagrico
20ನೇ ಕಂತು ಸೇರಿದಂತೆ 2025 ನೇ ಸಾಲಿನ ಪಿಎಂ ಕಿಸಾನ್ ಕಂತುಗಳ ದಿನಾಂಕ ಪ್ರಕಟ&Pmkisan Kisan instalment dates https://krushirushi.in/Pmkisan-instalment-dates https://krushirushi.in/Pmkisan-instalment-dates 20ನೇ ಕಂತು ಸೇರಿದಂತೆ 2025 ನೇ ಸಾಲಿನ ಪಿಎಂ ಕಿಸಾನ್ ಕಂತುಗಳ ದಿನಾಂಕ ಪ್ರಕಟ-Pmkisan Kisan instalment dates

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬ‌ರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 20ನೇ ಕಂತು ಇದೇ ಜುಲೈ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 20ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 20th instalment date

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Fri, 04 Jul 2025 07:17:43 +0530 shivuagrico
Rain alert&ಈ 9 ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಮಳೆ ಸುರಿಯಲಿದೆ https://krushirushi.in/Rain-alert-2206 https://krushirushi.in/Rain-alert-2206 Rain alert-ಈ 9 ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಮಳೆ ಸುರಿಯಲಿದೆ

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ.


ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ಜುಲೈ 6ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಬಹುದು. ತೋಟಗಳಿಗೆ ಔಷಧಿ ಸಿಂಪಡಿಸಲು ಇಡೀ ದಿನ ಮಳೆ ಬಿಟ್ಟು ಸಿಗುವ ಸಾಧ್ಯತೆ ಕಾಣಿಸುತ್ತಿಲ್ಲ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.


ಈಗಿನಂತೆ ಜುಲೈ 5ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ನಂತರವೂ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗ ಒಂದೆರಡು ಕಡೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ, ಯಾದಗಿರಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.


ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಜುಲೈ 4ರಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆ(Rain)ಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆಯಾಗಿದೆ? ಆಗುಂಬೆ, ಕದ್ರಾ, ಜೋಯ್ಡಾ, ಗೇರುಸೊಪ್ಪ, ಸಿದ್ದಾಪುರ, ಮೂಡುಬಿದಿರೆ, ಕಾರ್ಕಳ, ಲೋಂಡಾ, ಶೃಂಗೇರಿ, ಕಮ್ಮರಡಿ, ಕೊಪ್ಪ, ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ, ಅಂಕೋಲಾ, ಶಿರಾಲಿ, ಯಲ್ಲಾಪುರ, ಬಂಟವಾಳ, ಮಂಕಿ, ಚಿಂಚೋಳಿ, ಹುಮ್ನಾಬಾದ್, ಸೋಮವಾರಪೇಟೆ, ಜಯಪುರ, ಭಾಗಮಂಡಲ,ತ್ಯಾಗರ್ತಿ, ನಾಪೋಕ್ಲು, ಕಳಸ, ಸೇಡಂ, ಮಂಠಾಳ, ಚಿತ್ತಾಪುರ, ಖಾನಾಪುರ, ಕುಮಟಾ, ಉಡುಪಿ, ಕೋಟಾ, ಗೋಕರ್ಣ, ಮುಲ್ಕಿ, ಹಳಿಯಾಳ, ಕಾರವಾರ, ಬೀದರ್, ಕೂಡಲಸಂಗಮ, ವಿರಾಜಪೇಟೆ, ಬಾಳೆಹೊನ್ನೂರು, ಕೊಟ್ಟಿಗೆಹಾರ, ಕೊಟ್ಟೂರು, ಹುಂಚದಕಟ್ಟೆ, ಕಂಪ್ಲಿಯಲ್ಲಿ ಮಳೆಯಾಗಿದೆ.

]]>
Thu, 03 Jul 2025 18:51:12 +0530 shivuagrico
Input subsidy for croploss&ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ https://krushirushi.in/Input-subsidy-for-croploss-2205 https://krushirushi.in/Input-subsidy-for-croploss-2205 Input subsidy for croploss-ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ

2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.


ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್‌ ಸಬ್ಸಿಡಿ ರೈತರ ಬ್ಯಾಂಕ್‌ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.

]]>
Thu, 03 Jul 2025 07:10:40 +0530 shivuagrico
Crop insurance&ಈ ಜಿಲ್ಲೆಸ ರೈತರ ಖಾತೆಗೆ ಬಾಕಿ 30 ಕೋಟಿ ಬೆಳೆವಿಮೆ ಹಣ ಜಮಾ https://krushirushi.in/Crop-insurance-2202 https://krushirushi.in/Crop-insurance-2202 Crop insurance-ರೈತರ ಬಾಕಿ 30 ಕೋಟಿ ಬೆಳೆವಿಮೆ ಹಣ ರೈತರ ಖಾತೆಗೆ ಜಮಾ


ಧಾರವಾಡದ ರೈತರಿಗೆ 30 ಕೋಟಿ ಬೆಳೆವಿಮಾ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.


ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು
ಧಾರವಾಡ ಜಿಲ್ಲೆಯ 2024ರ ಖಾರೀಫ್ ಹಂಗಾಮಿನಲ್ಲಿ ಹೆಸರು ಬೆಳೆಗೆ ಬೆಳೆ ವಿಮಾ ಮಾಡಿಸಿದ ಕುಂದಗೋಳ ಹಾಗೂ ಶಿರಗುಪ್ಪಿ ಹೋಬಳಿಗಳ ರೈತರಿಗೆ ಅತಿಯಾದ ಮಳೆಯಿಂದ ಹಾನಿಗೊಳಗಾದ ಈ ಬೆಳೆಗೆ ಈಗ ಅಂದಾಜು 30 ಕೋಟಿ ಹಣವನ್ನು  ವಿಮೆ ಬಿಡುಗಡೆಗೆ ಆದೇಶ ನೀಡಲಾಗಿದ್ದು ಈ ಮೊದಲು ಈ ಬೆಳೆಗಳಿಗೆ ವಿವಿಧ ಕಾರಣಗಳಿಂದ  ವಿಮಾ ಬಿಡುಗಡೆಯಾಗಿರಲಿಲ್ಲ. 

ಮುಖ್ಯವಾಗಿ ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿಯವರು  ತಾಂತ್ರಿಕ ಕಾರಣಗಳೊಂದಿಗೆ ಬೆಳೆ ಕಟಾವು ಸಮೀಕ್ಷೆ ಪ್ರಕಾರ ವಿಮೆ ನೀಡಲು ಮಾನದಂಡಗಳು ಹೊಂದಾಣಿಕೆಯಾಗುತ್ತಿಲ್ಲವೆಂದು ನಿರಾಕರಿಸಿದ್ದರು. ನಂತರ ನಾನು  ಜಿಲ್ಲಾಧಿಕಾರಿಗಳಿಗೆ ಈ ವಿಷಯವನ್ನು ವಿಮಾ ಪರಿಹಾರದ ಜಿಲ್ಲಾ ಮಟ್ಟದ ಜಂಟಿ ಸಮಿತಿಯಲ್ಲಿ (DLJC) ತೆಗೆದುಕೊಂಡು  ಇತ್ಯರ್ಥಗೊಳಿಸಲು ಸೂಚಿಸಿದ್ದೆನು. ಅದಕ್ಕೂ ವಿಮಾ ಕಂಪನಿ ವಿವಿಧ ಹಂತದಲ್ಲಿ ಅಪೀಲು ಮಾಡಿ ಅಡತಡೆಗಳೆನ್ನು ಉಂಟು ಮಾಡಿತ್ತು, ಕೊನೆಗೆ ಕೇಂದ್ರ ಕೃಷಿ ಸಚಿವ ಶ್ರೀ ಶಿವರಾಜ್‌ಸಿಂಗ್ ಚವ್ಹಾಣ ಅವರ ನೇತೃತ್ವ ಹಾಗೂ ಹಣಕಾಸು ಕಾರ್ಯದರ್ಶಿಗಳೊಂದಿಗೆ ನಾನು ಸಭೆ ನಡೆಸಿ ಅವರಿಗೆ ವಿವರವಾಗಿ ಮನದಟ್ಟು ಮಾಡಿ ಧಾರವಾಡ ಜಿಲ್ಲೆಯ ಎರೆಡು ಹೋಬಳಿಯ ಹೆಸರು ಬೆಳೆಗೆ ವಿಮೆ ಮಾಡಿದ ರೈತರಿಗೆ ವಿಮೆ ಬಿಡುಗಡೆಗೆ ಮಾಡುವಂತೆ ಕೋರಿದ್ದೆನು.


ಈಗ ವಿಮೆ ಬಿಡುಗಡೆ ಆಗಿದ್ದು ಅತೀ ಶೀಘ್ರದಲ್ಲೇ ರೈತರ ಖಾತೆಗಳಿಗೆ ನೇರವಾಗಿ ಹಣ ಜಮೆಯಾಗಲಿದೆ
ಆದರೆ ಕೆಲ ಮಧ್ಯವರ್ತಿಗಳು ತಾವೇ ವಿಮೆ ಬಿಡುಗಡೆ ಮಾಡಿಸಿರುವುದಾಗಿ ಹೇಳಿ ರೈತರಿಂದ ಅಧಿಕ ಹಣ ಪಡೆಯುವ ದಾರಿ ತಪ್ಪಿಸುವ ವ್ಯವಸ್ಥಿತ ಜಾಲವೇ ಇದೆ ಎಂಬುದು ನನ್ನ ಗಮನಕ್ಕೆ ಬಂದಿದ್ದು, ರೈತರು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ಯಾರಿಗೂ ತಮ್ಮ ಖಾತೆಯಿಂದ ಹಣ ನೀಡುವ ಅವಶ್ಯಕತೆ ಇಲ್ಲ. ನಮ್ಮ ಸರ್ಕಾರದ ಆಡಳಿತದಲ್ಲಿ ರೈತ ಮತ್ತು ಸರ್ಕಾರದ ನಡುವೆ ಯಾವುದೇ ಮಧ್ಯವರ್ತಿಗಳಿಗೆ ಅವಕಾಶವಿಲ್ಲ.
ಯಾರಾದರೂ ಹಣ ಕೇಳಿದರೆ ನಮ್ಮ ಕಛೇರಿಗೆ ಅಥವಾ ಜಿಲ್ಲಾಧಿಕಾರಿ, ಕೃಷಿ ಅಧಿಕಾರಿಗಳ ಗಮನಕ್ಕೆ ತನ್ನಿ.


ವಿಮೆ ಹಣ ದೊರಕಿ ರೈತರಿಗೆ ನೆರವಾಗುವಂತಹ ಯೋಜನೆ ರೂಪಿಸಿ ರೈತರ ಬೆನ್ನಿಗೆ ನಿಂತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ   ಅದನ್ನು ಸಕಾರಾತ್ಮಕ ಬದಲಾವಣೆಗಳೊಂದಿಗೆ ಅನುಷ್ಠಾನಗೊಳಿಸುತ್ತಿರುವ ಕೇಂದ್ರ ಕೃಷಿ ಸಚಿವ  ಶಿವರಾಜ್‌ಸಿಂಗ್ ಚವ್ಹಾಣ್  ಅವರಿಗೆ ಧನ್ಯವಾದಗಳು ತಿಳಿಸಿದ್ದಾರೆ.

 ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Wed, 02 Jul 2025 10:24:31 +0530 shivuagrico
Bele vime&ಈ ಜಿಲ್ಲೆಯ 71,177 ರೈತರಿಗೆ ಬಾಕಿ 156.14 ಕೋಟಿ ಬೆಳೆವಿಮೆ ಜಮಾ,ನಿಮಗೆಷ್ಟು ಜಮಾ ಚೆಕ್ ಮಾಡಿ https://krushirushi.in/Bele-vime-2201 https://krushirushi.in/Bele-vime-2201 Bele vime-ಈ ಜಿಲ್ಲೆಯ 71,177 ರೈತರಿಗೆ 156.14 ಕೋಟಿ ಬೆಳೆವಿಮೆ ಜಮಾ,ನಿಮಗೆಷ್ಟು ಜಮಾ ಚೆಕ್ ಮಾಡಿ

ತೋಟಗಾರಿಕೆ ಬೆಳೆಗಳಿಗೆ 2023-24ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಉಂಟಾದ ಬೆಳೆ ನಷ್ಟಕ್ಕೆ 156.14 ಲಕ್ಷ ರೂ. ಬೆಳೆ ವಿಮೆ (crop Insurance) ಪರಿಹಾರ ಬಿಡುಗಡೆಯಾಗಿದೆ. ರೈತರ ಖಾತೆಗಳಿಗೆ ವಿಮೆ ಹಣ ಜಮಾ ಆಗಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡಿಕೆ, ಮಾವು, ಮೆಣಸು ಮತ್ತು ಶುಂಠಿ ಬೆಳೆಗಳಿಗೆ 73,271 ರೈತರು ವಿಮೆ ಪಾವತಿಸಿದ್ದರು. ಅದರಲ್ಲಿ 71,177 ರೈತರಿಗೆ ವಿಮೆ ಪರಿಹಾರ ಬಂದಿದೆ. ಅಡಿಕೆ ವಿಮೆ ಮಾಡಿಸಿದ 68,951 ರೈತರಿಗೆ ಸೋಮವಾರದಿಂದ ಅವರ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆಯಾಗುತ್ತದೆ. ಮಾವು, ಮೆಣಸು ಮತ್ತು ಶುಂಠಿ ಬೆಳೆದ 2226 ರೈತರ ಖಾತೆಗೆ ಈಗಾಗಲೇ ಬೆಳೆ ವಿಮೆ ಪರಿಹಾರ ಜಮೆ ಆಗಿದೆ. ಹಿಂದಿನ 2 ವರ್ಷಗಳಿಗಿಂತ ಈ ವರ್ಷ ಅಧಿಕವಾಗಿ ಬೆಳೆ ವಿಮೆ(bele vime) ಮೊತ್ತವು ರೈತರ ಖಾತೆಗೆ ಜಮೆ ಆಗುತ್ತಿದೆ.

 ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Wed, 02 Jul 2025 06:49:22 +0530 shivuagrico
ಜಿಲ್ಲಾವಾರು,ಬೆಳೆವಾರು ಹವಾಮಾನ ಆಧಾರಿತ ಬೆಳೆವಿಮೆ ದಿನಾಂಕ ಬಿಡುಗಡೆ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ&Weather based crop insurance system https://krushirushi.in/Weather-based-crop-insurance-system-2200 https://krushirushi.in/Weather-based-crop-insurance-system-2200 ಜಿಲ್ಲಾವಾರು,ಬೆಳೆವಾರು ಬೆಳೆವಿಮೆ ದಿನಾಂಕ ಬಿಡುಗಡೆ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ-crop insurance last date  


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2025-26" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ

ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ

]]>
Tue, 01 Jul 2025 14:47:49 +0530 shivuagrico
ಬೆಳೆ ಸಮಿಕ್ಷೆ ವರದಿಯಲ್ಲಿ approved ಎಂದು ಇದ್ದವರಿಗೆ ಮಾತ್ರ ಬೆಳೆವಿಮೆ,ಬೆಳೆಹಾನಿ ಪರಿಹಾರ,ನಿಮ್ಮ ಸ್ಟೇಟಸ್ ಒಮ್ಮೆ ಚೆಕ್ ಮಾಡಿಕೊಳ್ಳಿ&Crop survey report https://krushirushi.in/Crop-survey-report-2199 https://krushirushi.in/Crop-survey-report-2199 ಬೆಳೆ ಸಮಿಕ್ಷೆ ವರದಿಯಲ್ಲಿ approved ಎಂದು ಇದ್ದವರಿಗೆ ಮಾತ್ರ ಬೆಳೆವಿಮೆ,ಬೆಳೆಹಾನಿ ಪರಿಹಾರ,ನಿಮ್ಮ ಸ್ಟೇಟಸ್ ಒಮ್ಮೆ ಚೆಕ್ ಮಾಡಿಕೊಳ್ಳಿ-Crop survey report

ಬೆಳೆ ಸಮೀಕ್ಷೆ(Bele samikshe) ಮೂಲಕ ಸಂಗ್ರಹಿಸಲಾದ ಬೆಳೆ
ಮಾಹಿತಿ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ ದರ್ಶಕ ಮೊಬೈಲ್ ಆ್ಯಪ್(Bele darshaka App)ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ(Crop survey portal) ಮೂಲಕ ಆಕ್ಷೇಪಣೆ ಸಲ್ಲಿಸಬಹುದು. 

ಬೆಳೆ ಸಮೀಕ್ಷೆ ದತ್ತಾಂಶವನ್ನು ಬೆಳೆವಿಮೆ(Bele vime), ಬೆಂಬಲ ಬೆಲೆ ಯೋಜನೆಯಡಿ(MSP) ಬೆಳೆ ಮಾರಾಟ ಮಾಡಲು, ಬೆಳೆ ನಷ್ಟ ಪರಿಹಾರ(bele hani) ಹಾಗೂ ಇತರ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಳಕೆ ಮಾಡಲಾಗುವುದು. ಆದ್ದರಿಂದ ರೈತರು ತಾವು ಬೆಳೆದ ಬೆಳೆ ಹಾಗೂ ಬೆಳೆ ಸಮೀಕ್ಷೆಯಲ್ಲಿ (crop survey)ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಖಾತ್ರಿಪಡಿಸಿಕೊಳ್ಳಬೇಕು. ಒಂದು ವೇಳೆ ಭಿನ್ನವಾಗಿದ್ದಲ್ಲಿ, ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ನಂತರದ ಆಕ್ಷೇಪಣೆ ಸ್ವೀಕರಿಸಲಾಗುವುದಿಲ್ಲ.

ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಗೂಗಲ್ ಪ್ಲೇ ಸ್ಟೋರ್ ಮೂಲಕ ಅಥವಾ https://play.google.com/store/apps/details?id=com.crop.offcskharif_2021  ಲಿಂಕ್ ಮೇಲೆ ಕ್ಲಿಕ್ ಮಾಡಿ bele Darshaka application ಇನ್ಸ್ ಸ್ಟಾಲ್ ಮಾಡಿಕೊಳ್ಳಬಹುದು. 

ನಂತರ ರೈತ select ಮಾಡಿ

ನಂತರ ವರ್ಷ,ಋುತು, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ.

ನಂತರ ಸರ್ವೇ ನಂಬರ್ ಹಾಕಿ,ಹಿಸ್ಸಾಆಯ್ಕೆ ಮಾಡಿ,ಸಮೀಕ್ಷೆಯ  ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ

ನಂತರ ಬೆಳೆವಿವರ ವೀಕ್ಷಿಸಿ ಮೇಲೆ ಕ್ಲಿಕ್ ಮಾಡಿ

ನಂತರ photo ಮೇಲೆ ಕ್ಲಿಕ್ ಮಾಡಿದರೆ ನೀವು ಬೆಳೆದ ಬೆಳೆ ಹಾಗೂ ಫೋಟೊ ಅಪ್ಲೊಡ್ ಸರಿಯಾಗಿರುವುದನ್ನು ಪರಿಕ್ಷೀಸಿ.

ಬೆಳೆ ಸಮಿಕ್ಷೆ ಸರಿಯಾಗಿರದಿದ್ದರೆ, ಆಕ್ಷೇಪಣೆ ಸಲ್ಲಿಸಿದರೆ, ಪುನಃ ಬೆಳೆ ಸಮಿಕ್ಷೆ ಮಾಡಿ ಸರಿಪಡಿಸಲು ಅವಕಾಶವಿರುತ್ತದೆ.

ಏನಿದು ಬೆಳೆ ದರ್ಶಕ ಆ್ಯಪ್?

ಈ ಅಪ್ಲಿಕೇಶನ್ ಮಾಡಿದ ಉದ್ದೇಶ ಬೆಳೆ ಸಮೀಕ್ಷೆಯನ್ನು (Crop survey)ನೋಡಲು.. ಇದರಲ್ಲಿ ನೀವು ಅಪ್‌ಲೋಡ್ ಮಾಡಿದ ಚಿತ್ರಗಳನ್ನು ಮತ್ತು ಸಮೀಕ್ಷೆ ಮಾಡಿದ ಸರ್ವೇಯರ್ ವಿವರಗಳನ್ನು ನೋಡಬಹುದು.

ತಮ್ಮ ಮೊಬೈಲ್ ಮೂಲಕ ಬೆಳೆಗಳ ಸಮೀಕ್ಷೆ(Bele samikshe) ಮಾಡಬಹುದು. ಅಥವಾ ನೆರೆಯ ಖಾಸಗಿ ವ್ಯಕ್ತಿಗಳ (Private resident) ಮೊಬೈಲ್ ಮೂಲಕ ಜಮೀನುಗಳ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ನಿಮ್ಮ ಜಮೀನಿನ ಸರ್ವೆ ನಂಬರ್(Survey number) ಮತ್ತು ಜಮೀನಿನ ಫೊಟೋ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಮೊಬೈಲ್ ನಲ್ಲಿ Bele darshak app ಮೂಲಕ ಕ್ಷಣಾರ್ಧದಲ್ಲಿ  ನೋಡಬಹುದು. ಒಂದು ವೇಳೆ ತಪ್ಪಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು. 

ಬೆಳೆ ದರ್ಶಕ್ ಆ್ಯಪ್(bele darshaka app) ಇನ್ಸ್ ಸ್ಟಾಲ್ ಮಾಡಿಕೊಂಡ ನಂತರ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಇನ್ನಿತರ ಮಾಹಿತಿ ನಮೂದಿಸಬೇಕು. ಬೆಳೆ ದರ್ಶಕ್ ಆ್ಯಪ್(Bele darshaka application) ಮೂಲಕ ಜಮೀನಿನಲ್ಲಿ ಬೆಳೆ ಸಮೀಕ್ಷೆ (Bele samikshe)ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ (Crop survey)ಸಮಯದಲ್ಲಿ ತೆಗೆಯಲಾದ ಜಿಪಿಎಸ್ ಆಧಾರಿತ (GPS Photo)ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ಅಲ್ಲದೆ ರೈತರ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ, (Mobile number)ರೈತರು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ನೋಡಬಹುದು.

 ಒಂದು ವೇಳೆ ಮಾಹಿತಿ ತಪ್ಪಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು.ಮೇಲ್ವಿಚಾರಕರು ಸೂಕ್ತ ಬೆಳೆಗಳನ್ನು ದಾಖಲಿಸಿ ರೈತರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುತ್ತಾರೆ. ಇನ್ನೇಕೆ ತಡ ಒಮ್ಮೆ ನಿಮ್ಮ ಬೆಳೆ ಸಮೀಕ್ಷೆಯಲ್ಲಿ ಎಲ್ಲಾ ಸರ್ವೆ ನಂಬರ್, ಮಾಹಿತಿ ಹಾಗೂ ಫೋಟೋ ಸರಿಯಾಗಿ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಡಿ

]]>
Tue, 01 Jul 2025 07:10:47 +0530 shivuagrico
ಇಕೆವೈಸಿ ಆದವರಿಗೆ ಮಾತ್ರ ಪಿಎಂ ಕಿಸಾನ್ 20ನೇ ಕಂತು, ಈಗಾಗಲೇ ಇಕೆವೈಸಿ ಆಗಿದ್ದರೂ ಇನ್ನೊಂದು ಬಾರಿ ಇಕೆವೈಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ&Pmkisan ekyc Status https://krushirushi.in/Pmkisan-ekyc-status-2198 https://krushirushi.in/Pmkisan-ekyc-status-2198 ಇಕೆವೈಸಿ ಆದವರಿಗೆ ಮಾತ್ರ ಪಿಎಂ ಕಿಸಾನ್ 20ನೇ ಕಂತು, ಈಗಾಗಲೇ ಇಕೆವೈಸಿ ಆಗಿದ್ದರೂ ಇನ್ನೊಂದು ಬಾರಿ ಇಕೆವೈಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ-Pmkisan ekyc Status

ಪಿ.ಎಂ.ಕಿಸಾನ್ ಯೋಜನೆಯಡಿ ರೈತ ಬಂಧುಗಳು ಆರ್ಥಿಕ ನೆರವು ಪಡೆಯಲು e-KYC ಕಡ್ಡಾಯಗೊಳಿಸಲಾಗಿದೆ. e-KYC ಮಾಡಿಸಲು ಬಾಕಿ ಇರುವ ರೈತರು ಕೂಡಲೇ e-KYC ಮಾಡಿಸಿಕೊಳ್ಳಲು ಕೋರಿದೆ.


ಸದ್ಯದಲ್ಲೇ ಪಿಎಂ ಕಿಸಾನ್ ಯೋಜನೆಯ 20 ನೇ ಕಂತು ಬಿಡುಗಡೆಯಾಗುತ್ತಿದ್ದು, ಇಕೆವೈಸಿ ಆದವರಿಗೆ ಮಾತ್ರ ಜಮಾ ಆಗಲಿದೆ.ಆದ್ದರಿಂದ ಈಗಾಗಲೇ ಇಕೆವೈಸಿ ಆಗಿದ್ದರೂ ಸಹ ಇನ್ನೊಂದು ಬಾರಿ ಈ ಕೆಳಗಿನ 3 ವಿಧಾನಗಳ ಮೂಲಕ ಇಕೆವೈಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ.

ವಿಧಾನ 1.

OTP ಆಧಾರಿತ ಇಕೆವೈಸಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/aadharekyc.aspx

ನಂತರ ನಿಮ್ಮ ಆಧಾರ್ ನಂಬರ್ ಹಾಕಿ search ಮೇಲೆ ಕ್ಲಿಕ್ ಮಾಡಿ

ಈಗಾಗಲೇ ಇಕೆವೈಸಿ ಆಗಿದ್ದರೆ,Ekyc is already done ಎಂದು ತೋರಿಸುತ್ತದೆ.

ಇಲ್ಲದಿದ್ದರೆ ನಿಮ್ಮ ಮೊಬೈಲ್ ನಂಬರ್ ಹಾಕಿ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ ಇಕೆವೈಸಿ ಮಾಡಿಕೊಳ್ಳಿ

ವಿಧಾನ 2.

Biometric ಆಧಾರಿತ ಇಕೆವೈಸಿ

ನಿಮಗೆ OTP ಬರದಿದ್ದರೆ ನಾಗರಿಕ ಸೇವಾ ಕೇಂದ್ರ ಅಥವಾ ಗ್ರಾಮಒನ್ ಗೆ ಹೋಗಿ ನಿಮ್ಮ ಹೆಬ್ಬೆಟ್ಟನ್ನು ಒತ್ತಿ ಇಕೆವೈಸಿ ಮಾಡಿಸಿಕೊಳ್ಳಿ

ವಿಧಾನ 3.

ಮುಖಚರ್ಯೆ(Face authentication) ಆಧಾರಿತ ಇಕೆವೈಸಿ

ಈ ಕೆಳಗಿನ ಲಿಂಕ್ ಮೋಲೆ ಕ್ಲಿಕ್ ಮಾಡಿ ಅಪ್ಲಿಕೇಶನ್ ಡೌನ್ಲೊಡ್ ಮಾಡಿಕೊಳ್ಳಿ

https://play.google.com/store/apps/dev?id=6767333309690298459

ನಂತರ ನಿಮ್ಮ ಮುಖ ಸ್ಕ್ಯಾನ್ ಮಾಡಿ Ekyc ಮಾಡಿ

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ಕಛೇರಿಯನ್ನು ಸಂಪರ್ಕಿಸಿ ಇಕೆವೈಸಿ ಮಾಡಿಸಿಕೊಳ್ಳಿ,ಈ ಮಾಹಿತಿಯನ್ನು ಇತರೆ ರೈತರಿಗೂ ಹಂಚಿಕೊಳ್ಳಿ

]]>
Mon, 30 Jun 2025 19:17:32 +0530 shivuagrico
Belevime last date&ಈ ಬೆಳೆಗಳಿಗೆ ಬೆಳೆವಿಮೆ ಕಟ್ಟಲು ಜು.31 ಕೊನೆಯ ದಿನಾಂಕ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ&crop insurance last date https://krushirushi.in/Belevime-last-date-crop-insurance-last-date-2197 https://krushirushi.in/Belevime-last-date-crop-insurance-last-date-2197 ಈ ಬೆಳೆಗಳಿಗೆ ಬೆಳೆವಿಮೆ ಕಟ್ಟಲು ಜು.31 ಕೊನೆಯ ದಿನಾಂಕ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ-crop insurance last date  

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2025-26" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ

ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ

]]>
Mon, 30 Jun 2025 12:39:49 +0530 shivuagrico
ಪಿಎಂ ಕಿಸಾನ್ 20ನೇ ಕಂತಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್,ಈ ಪಟ್ಟಿಯಲ್ಲಿರುವ 7 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ&pmkisan ineligible list https://krushirushi.in/Pmkisan-ineligible-list-2196 https://krushirushi.in/Pmkisan-ineligible-list-2196 ಪಿಎಂ ಕಿಸಾನ್ 20ನೇ ಕಂತಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್,ಈ ಪಟ್ಟಿಯಲ್ಲಿರುವ 7 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ-pmkisan ineligible list

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ನೋಂದಾಯಿಸಿದ್ಧ ರಾಜ್ಯದ 7 ಲಕ್ಷಕ್ಕೂ ಅಧಿಕ ರೈತರನ್ನು ಅನರ್ಹಗೊಳಿಸಲಾಗಿದೆ.


ರಾಜ್ಯದಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಆರಂಭವಾದ ಒಂದು ವರ್ಷದಲ್ಲಿ 53.81 ಲಕ್ಷಕ್ಕೂ ಅಧಿಕ ರೈತರು ನೋಂದಣಿ ಮಾಡಿಸಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದರು.

ಇವರ ಪೈಕಿ 7 ಲಕ್ಷಕ್ಕೂ ಅಧಿಕ ರೈತರನ್ನು ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಅನರ್ಹಗೊಳಿಸಲಾಗಿದೆ.

ಭೂ ದಾಖಲೆಗಳ ಕೊರತೆ, ಇ-ಕೆವೈಸಿ ಸಮಸ್ಯೆ, ತೆರಿಗೆ ಪಾವತಿದಾರರು, ಸರ್ಕಾರಿ ನೌಕರಿ ಹೊಂದಿರುವುದು, ಸಾಂವಿಧಾನಿಕ ಹುದ್ದೆಗಳಲ್ಲಿ ಕಾರ್ಯನಿರ್ವಹಣೆ ಸೇರಿದಂತೆ ಅನೇಕ ಕಾರಣಗಳಿಂದ ಹಂತ ಹಂತವಾಗಿ ಪರಿಶೀಲನೆ ನಡೆಸಿ ಸುಮಾರು 7 ಲಕ್ಷ ರೈತರನ್ನು ಅನರ್ಹಗೊಳಿಸಲಾಗಿದೆ.

2018ರಲ್ಲಿ ಯೋಜನೆ ಆರಂಭವಾದ ಸಂದರ್ಭದಲ್ಲಿ 19,819 ರೈತರು ನೋಂದಾಯಿಸಿದ್ದು, 2019-20 ರಲ್ಲಿ 53,81,184 ರೈತರು ನೋಂದಾಯಿಸಿದ್ದರು. ಅರ್ಹರಲ್ಲದವರು ಕೂಡ ಹೆಸರು ನೋಂದಾಯಿಸಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದರಿಂದ ಪರಿಶೀಲನೆ ಕಾರ್ಯ ಆರಂಭಿಸಲಾಗಿದ್ದು, ಈಗ 47.50 ಲಕ್ಷ ರೈತರು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ.

ರೈತರ ನೋಂದಣಿ ಕಾರ್ಯ ನಿರಂತರವಾಗಿ ನಡೆಯುವುದರಿಂದ ಪ್ರತಿ ಕಂತು ವಿತರಣೆಯ ಸಂದರ್ಭದಲ್ಲಿ ರೈತರ ಸಂಖ್ಯೆ ಹೆಚ್ಚು ಕಡಿಮೆಯಾಗುತ್ತದೆ. ಅರ್ಹರನ್ನು ಸೇರಿಸುವುದು, ಅನರ್ಹರನ್ನು ಕೈಬಿಡುವ ಪ್ರಕ್ರಿಯೆ ನಿರಂತರವಾಗಿರುತ್ತದೆ.

ಆಧಾರ್ ಮತ್ತು ಪಹಣಿಯೊಂದಿಗೆ ಫ್ರೂಟ್ಸ್ ಐಡಿ ತಂತ್ರಾಂಶದಲ್ಲಿ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿ ಇ-ಕೆವೈಸಿಯೊಂದಿಗೆ ಕಿಸಾನ್ ಸಮ್ಮಾಣ್ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಜಮೀನಿನ ಮಾಲೀಕರು ನಿಧನರಾಗಿದ್ದಲ್ಲಿ ಇತರೆ ವಾರಸುದಾರರು ಪೌತಿ ಖಾತೆ ಮಾಡಿಸಿದರೆ ಯೋಜನೆಗೆ ಅರ್ಹರಾಗುತ್ತಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2019 ರ ನಂತರ ಜಮೀನು ಖರೀದಿಸಿದವರು ಮತ್ತು ತಂದೆಯ ಜಮೀನನ್ನು ಭಾಗ ಮಾಡಿಕೊಂಡಿದ್ದರೆ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಲಾಗಿದೆ. ಒಂದು ವೇಳೆ ತಾಂತ್ರಿಕ ದೋಷ, ಇ-ಕೆವೈಸಿ ಸಮಸ್ಯೆಯಿಂದ ಯಾವುದೇ ರೈತರ ಹೆಸರು ಪಟ್ಟಿಯಿಂದ ಹೊರಗುಳಿದಿದ್ದರೆ ಮತ್ತೊಮ್ಮೆ ಪರಿಶೀಲನೆಗೆ ಒಳಪಡಿಸಲು ಅವಕಾಶವಿದೆ. ಈ ಯೋಜನೆಯಡಿ ವಾರ್ಷಿಕ 6,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. 3 ಕಂತುಗಳಲ್ಲಿ 4 ತಿಂಗಳಿಗೊಮ್ಮೆ ನೇರವಾಗಿ ರೈತರ ಖಾತೆಗೆ 2 ಸಾವಿರ ರೂ. ವರ್ಗಾಯಿಸಲಾಗುವುದು.

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 20ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 20th instalment eligible list

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

Pmkisan 20th instalment ineligible list-ಪಿಎಂ ಕಿಸಾನ್ 19ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Mon, 30 Jun 2025 06:18:59 +0530 shivuagrico
Government property&ವಕ್ಫ್ ಆಯ್ತು,ಈಗ ರೈತರ ಪಹಣಿಗಳಲ್ಲಿ ಸರ್ಕಾರ ಎಂದು ನಮೂದು,ನಿಮ್ಮ ಪಹಣಿಯನ್ನೊಮ್ಮೆ ಚೆಕ್ ಮಾಡಿಕೊಂಡು ಬಿಡಿ https://krushirushi.in/Government-property-2195 https://krushirushi.in/Government-property-2195

Government property-ವಕ್ಫ್ ಆಯ್ತು,ಈಗ ರೈತರ ಪಹಣಿಗಳಲ್ಲಿ ಸರ್ಕಾರ ಎಂದು ನಮೂದು,ನಿಮ್ಮ ಪಹಣಿಯನ್ನೊಮ್ಮೆ ಚೆಕ್ ಮಾಡಿಕೊಂಡು ಬಿಡಿ


ಪಹಣಿಯಲ್ಲಿ ‘ಸರ್ಕಾರ’ ಎಂದು ನಮೂದಾಗಿರುವ ಕಾರಣಕ್ಕೆ ರೈತರಿಗೆ ಮೂರು ದಶಕಗಳಿಂದ ಕೃಷಿಗೆ ಸಂಬಂಧಿಸಿದ ಯಾವುದೇ ಸರ್ಕಾರಿ ಸೌಲಭ್ಯಗಳು ದೊರೆಯುತ್ತಿಲ್ಲ.

ನೀರಿನ ಕರ ಕಟ್ಟದಿರುವುದಕ್ಕೆ ಸರ್ಕಾರ ರೈತರ ಹೆಸರಿನ ಜಮೀನನ್ನು ತನ್ನದು ಎಂಬ ರೀತಿಯಲ್ಲಿ ಸರ್ಕಾರ ಎಂದು ಬರೆದುಕೊಂಡಿದೆ. ಇದರಿಂದ ರೈತರು ಕೇವಲ ಅದನ್ನು ಸಾಗುವಳಿ ಮಾಡಿ, ಫಸಲು ತೆಗೆಯಬಹುದು. ಆದರೆ ಅದರ ಮೇಲೆ ರೈತರಿಗೆ ಹಕ್ಕಿಲ್ಲದಂತಾಗಿದೆ. ಸಾಲ ಸೌಲಭ್ಯ ಸೇರಿದಂತೆ ಸರ್ಕಾರದ ಯಾವ ಯೋಜನೆಗಳು ಸಿಗದಂತಾಗಿದೆ.

ನಿಮಗೆ ಗೊತ್ತಿಲ್ಲದೇ ಹಾಗೆ ನಿಮ್ಮ ಪಹಣಿಯಲ್ಲಿ(RTC) ಅವರ ಹೆಸರು ಹಾಕಿದ್ದಾರೆ ಎಂಬುದನ್ನು ರೈತರು ಒಮ್ಮೆ ಪರಿಶೀಲಿಸಿ. ಈ ಕೆಲಸವನ್ನು ಪ್ರತಿಯೊಂದು ರೈತರು ಆದಷ್ಟು ಬೇಗ ಮಾಡಬೇಕು. ಈ ಮಾಹಿತಿ ನಿಮ್ಮ ಕಾನೂನು ಹೋರಾಟಕ್ಕೆ ನಿರ್ಣಾಯಕ ಹಾಗೂ ಸಾಕ್ಷ್ಯ ಸಂಗ್ರಹಿಸಲು ಅಗತ್ಯವಾದ ಪ್ರಕ್ರಿಯೆ ಆಗಿರುತ್ತದೆ. ಆದ್ದರಿಂದ ಇಂದೇ ನಿಮ್ಮ ಪಹಣಿಯ(Uthara) ಕಾಪಿ ಪಡೆದು ಪರಿಶೀಲನೆ ಮಾಡಿ, ಒಂದು ವೇಳೆ ಯಾರಾದರು ಎಂದು ನಮೂದಿಸಲಾಗಿದ್ದಲ್ಲಿ ಕೂಡಲೇ ಜಮೀನಿನ ದಾಖಲೆ(Land records) ಹಾಗೂ ಪಹಣಿಯೊಂದಿಗೆ ತಹಶಿಲ್ದಾರ್ ಅಥವಾ ಜಿಲ್ಲಾದಿಕಾರಿಗಳಿಗೆ ದೂರು ಸಲ್ಲಿಸಿ

ನಿಮ್ಮ ಪಹಣೆಯಲ್ಲಿ(pahani) ಯಾರ ಹೆಸರಿದೆ ಎಂದು ತಿಳಿದುಕೊಳ್ಳಲು ಮೊದಲು ಈ ಕೆಳಗಿನ ಲಿಂಕ್ ಮೋಲೆ ಕ್ಲಿಕ್ ಮಾಡಿ

https://landrecords.karnataka.gov.in/Service2/

 ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ

  ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ

ನಂತರ view ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ

ಪಹಣೆಯಲ್ಲಿ ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.

ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.

]]>
Sun, 29 Jun 2025 18:37:01 +0530 shivuagrico
Google Pay loan&ಕೇವಲ 2 ನಿಮಿಷದಲ್ಲಿ Google pay ಮೂಲಕ ಯಾವುದೇ ಬಡ್ಡಿ ಇಲ್ಲದೇ 30,000 ದಿಂದ 10 ಲಕ್ಷ ಸಾಲ ಹೀಗೆ ಪಡೆಯಿರಿ https://krushirushi.in/Google-pay-loan-2194 https://krushirushi.in/Google-pay-loan-2194 Google Pay loan-ಕೇವಲ 2 ನಿಮಿಷದಲ್ಲಿ Google pay ಮೂಲಕ ಯಾವುದೇ ಬಡ್ಡಿ ಇಲ್ಲದೇ 30,000 ದಿಂದ 10 ಲಕ್ಷ ಸಾಲ ಹೀಗೆ ಪಡೆಯಿರಿ


ನಮ್ಮಲ್ಲಿ ಕೆಲವರಿಗೆ ತುರ್ತು ಹಣಕಾಸಿನ ಅವಶ್ಯಕತೆ ಉದ್ಭವವಾದಾಗ, ಬ್ಯಾಂಕ್ ಅಥವಾ ವ್ಯಕ್ತಿಗಳಿಂದ ಸಾಲ ಪಡೆಯುವುದು ಅನಿವಾರ್ಯವಾಗುತ್ತದೆ. ಆದರೆ ಎಲ್ಲರಿಗೂ ಎಲ್ಲ ಸಮಯದಲ್ಲೂ ಸಾಲ ಸಿಗುತ್ತದೆ ಎನ್ನುವುದಿಲ್ಲ. ಇಂತಹ ಸಂದರ್ಭಗಳಲ್ಲಿ ಕೆಲವೊಮ್ಮೆ ಹೆಚ್ಚಿನ ಬಡ್ಡಿದರದ ಸಾಲ ಪಡೆಯಬೇಕಾಗುತ್ತದೆ.

ಆದರೆ, ಈಗ ನೀವು ಸುಲಭವಾಗಿ, ಕಡಿಮೆ ಬಡ್ಡಿದರದಲ್ಲಿ, ಡಿಜಿಟಲ್ ರೀತಿಯಲ್ಲಿ Google Pay ಮುಖಾಂತರವೇ ಸಾಲ ಪಡೆಯಬಹುದು.

Google Pay ಮೂಲಕ ವೈಯಕ್ತಿಕ ಸಾಲ ಪಡೆಯುವುದು ಹೇಗೆ?


Google Pay ಮೂಲಕ ಸಾಲ ಪಡೆಯಲು ಈ ಅವಶ್ಯಕತೆಗಳು ಇರುತ್ತವೆ:

ಕನಿಷ್ಠ 21 ವರ್ಷದ ವಯಸ್ಸಿರಬೇಕುಸ್ಥಿರವಾದ ಆದಾಯವಿರುವ ಉದ್ಯೋಗ ಅಥವಾ ಸ್ವ ಉದ್ಯೋಗದಲ್ಲಿರಬೇಕುಬ್ಯಾಂಕ್ ಖಾತೆಯನ್ನು Google Pay ಗೆ ಲಿಂಕ್ ಮಾಡಿರಬೇಕುKYC ಪ್ರಕ್ರಿಯೆ ಪೂರ್ಣಗೊಳಿಸಬೇಕು

ಸಾಲ ಪಡೆಯುವ ಕ್ರಮ:

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ Google pay download ಮಾಡಿಕೊಳ್ಳಿ

https://g.co/payinvite/h4lj67 

ನಂತರ Google Pay ಆಪ್ ತೆರೆಯಿರಿ”

ನಂತರ Manage your money ಕೆಳಗಡೆ ಇರುವ Personal loan Apply now ಮೇಲೆ ಕ್ಲಿಕ್ ಮಾಡಿ

ನಂತರ Apply now ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಇಮೇಲೆ ಐಡಿ ಮತ್ತು ಮೊಬೈಲ್ ನಂಬರ್ ಹಾಕಿ continue ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಪ್ಯಾನ್ ಕಾರ್ಡ್ ನಲ್ಲಿ ಇರುವಂತೆ ನಿಮ್ಮ ಹೆಸರು ಹಾಕಿ continue ಮೇಲೆ ಕ್ಲಿಕ್ ಮಾಡಿ

 

ನಂತರ speed up your application with CIBIL ಕೆಳಗಡೆ ಇರುವ continue ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ PIN code ಹಾಕಿ Next ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ No loan offers available ಎಂದು ತೋರಿಸಿದರೆ ಈಗ ಸದ್ಯ ನಿಮಗೆ ಯಾವುದೇ ಲೋನ್ ಸಿಗುವುದಿಲ್ಲ,ಆದ್ದರಿಂದ ಕೆಲವು ತಿಂಗಳುಗಳ ನಂತರ ಮತ್ತೆ ಪ್ರಯತ್ನಿಸಿ

ನೀವು ಸಾಲಕ್ಕೆ ಅರ್ಹರಿದ್ದರೆ ವಿವರಗಳನ್ನು ಭರ್ತಿ ಮಾಡಿ, KYC ಅಪ್‌ಲೋಡ್ ಮಾಡಿಒಪ್ಪಂದಕ್ಕೆ ಡಿಜಿಟಲ್ ಸಹಿ ಮಾಡಿಅನುಮೋದನೆಗಾಗಿ ಕಾಯಿರಿ.

ನಂತರ ಅನುಮೋದನೆಯಾದ ಮೇಲೆ, ಸಾಲದ ಮೊತ್ತವನ್ನು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

Google Pay ಮೂಲಕ ಸಾಲ ಪಡೆಯುವುದು ವೇಗವಾಗಿ ಮತ್ತು ಸುಲಭವಾಗಿ ನಡೆಯುತ್ತದೆ. ಬ್ಯಾಂಕ್ ಶಾಖೆಗಳಿಗೆ ಹೋಗುವ ಕಷ್ಟವಿಲ್ಲದೆ, ತಕ್ಷಣವೇ ನಿಮಗೆ ಬೇಕಾದ ಹಣವನ್ನು ಪಾವತಿಸಿಕೊಳ್ಳಬಹುದು. ಆದರೂ, ಯಾವುದೇ ಹಣಕಾಸು ನಿರ್ಧಾರ ಕೈಗೊಳ್ಳುವ ಮೊದಲು ವೈಯಕ್ತಿಕವಾಗಿ ಪರಿಶೀಲಿಸಿ, ಅವಶ್ಯಕವಾದ ಸಲಹೆ ಪಡೆಯುವುದು ಉತ್ತಮ.

]]>
Sun, 29 Jun 2025 13:59:14 +0530 shivuagrico
Breaking News&ರೈತರ 300 ಕೋಟಿ ಬಾಕಿ ಸಾಲಮನ್ನಾ&ಸಿಎಂ ಸಿದ್ದರಾಮಯ್ಯ&Bele sala manna https://krushirushi.in/Bele-sala-manna-2193 https://krushirushi.in/Bele-sala-manna-2193 Breaking News-ರೈತರ 300 ಕೋಟಿ ಬಾಕಿ ಸಾಲಮನ್ನಾ-ಸಿಎಂ ಸಿದ್ದರಾಮಯ್ಯ-Bele sala manna

ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ರೈತರ ಸಾಲ ಮನ್ನಾ (Loan Waiver) ಮಾಡಿ ಬಾಕಿ ಉಳಿಸಿದ್ದ 300 ಕೋಟಿ ಹಣವನ್ನು ಕಾಂಗ್ರೆಸ್ ಸರ್ಕಾರ ಮುಂದಿನ ದಿನದಲ್ಲಿ ತೀರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಹಕಾರ ಸಚಿವ ಕೆಎನ್ ರಾಜಣ್ಣ ಅವರ 75ನೇ ವರ್ಷದ ‘ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಹೆಸರು ಪಡೆದುಕೊಂಡರು. ಆದರೆ ಬಾಕಿಯನ್ನು ನಮ್ಮ ಸರ್ಕಾರ ತೀರಿಸಬೇಕಾಗಿದೆ. ಹೆಸರು ಅವರಿಗೆ, ಹೊರೆ ಹೊತ್ತುಕೊಂಡಿದ್ದು ನಮ್ಮ ಸರ್ಕಾರ ಎಂದರು.

2018 ರಿಂದ ಇಲ್ಲಿಯವರೆಗೂ ಕರ್ನಾಟಕದಲ್ಲಿ ಯಾರಿಗೆಲ್ಲಾ ಎಷ್ಟು ಸಾಲ ಮನ್ನಾ ಆಗಿದೆ? ಹಾಗಾದರೆ ಯಾವ ಬಾಕಿ ರೈತರ ಸಾಲಮನ್ನಾ ಆಗಲಿದೆ,ಸಾಲಮನ್ನಾ ಆಗಲು ಬೇಕಾದ ದಾಖಲೆ ಹಾಗೂ ಅರ್ಹತೆಗಳೇನು? ಹೀಗೆ ಚೆಕ್ ಮಾಡಿ-Bele sala manna status 

2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಇದ್ದಾಗ ರಾಜ್ಯದ ರೈತರ ಸಾಲಮನ್ನಾ(Bele sala manna) ಮಾಡಿದ್ದರು.ಆದರೆ ಅದರಲ್ಲಿ ಕೇಲವು ರೈತರ ದಾಖಲೆಗಳ ಕೊರತೆಯಿಂದಾಗಿ ಬಾಕಿ ಉಳಿದ ಪ್ರಕರಣಗಳಲ್ಲಿ ದಾಖಲಾತಿಗಳನ್ನು ಸಲ್ಲಿಸಿದ ನಂತರ ಸಾಲಮನ್ನಾ ಆಗುತ್ತಿದೆ.ಹಾಗಾದರೆ ಈ ಲೇಖನದಲ್ಲಿ ಯಾವೆಲ್ಲಾ ದಾಖಲಾತಿಗಳು ಬೇಕಾಗಬಹುದು ಎಂದು ಚೆಕ್ ಮಾಡಬಹುದು.

ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

ನಂತರ "Revenue department/ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು"(Revenue department services)ಮೇಲೆ ಕ್ಲಿಕ್ ಮಾಡಿ

ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ"(farmer) ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು"(Submit)ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ(Crop loan wavier) ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ(Bele sala manna list) ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ

ನಂತರ "CLWS ರೈತನ ಅರ್ಹತೆ" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್(bank) select ಮಾಡಿ,ಸಲ್ಲಿಸು/Submit ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ(crop loan wavier) ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ

]]>
Sun, 29 Jun 2025 09:24:55 +0530 shivuagrico
Bele samikshe 2025&26:ಬೆಳೆ ಸಮೀಕ್ಷೆ ಮಾಡದಿದ್ದರೆ ಬೆಳೆವಿಮೆ,ಬೆಳೆಹಾನಿ ಪರಿಹಾರ ಸಿಗಲ್ಲ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಮಾಡಿ ಬೆಳೆ ಸಮೀಕ್ಷೆ https://krushirushi.in/Bele-samikshe-2025-26 https://krushirushi.in/Bele-samikshe-2025-26 Bele samikshe 2025-26:ಬೆಳೆ ಸಮೀಕ್ಷೆ ಮಾಡದಿದ್ದರೆ ಬೆಳೆವಿಮೆ,ಬೆಳೆಹಾನಿ ಪರಿಹಾರ ಸಿಗಲ್ಲ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಮಾಡಿ ಬೆಳೆ ಸಮೀಕ್ಷೆ

ಕರ್ನಾಟಕ ಸರ್ಕಾರ ಈ ಆಡಳಿತ ಮತ್ತು ಕೃಷಿ ಇಲಾಖೆ ಇವರ ಸಹಯೋಗದೊಂದಿಗೆ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ(crop survey) ರೈತರ ಆಪ್ ಬಿಡುಗಡೆ ಮಾಡಿದ್ದು, ರೈತರು ಗೂಗಲ್ ಪ್ಲೇ ಸ್ಟೋರ್ ನಿಂದ ಮುಂಗಾರು ರೈತರ ಬೆಳೆ ಸಮೀಕ್ಷೆ 2025-26 ಆಪ್ ಡೌನ್ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಅಪ್ಲೋಡ್ ಮಾಡಬಹುದು.

ರೈತ ಬಾಂಧವರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ಮುಂಗಾರು ರೈತರ ಬೆಳೆ ಸಮೀಕ್ಷೆ 2025-26 ಎಂಬ ಮೊಬೈಲ್‌ ಆ್ಯಪ್‌ ಗೂಗಲ್‌ ಪ್ಲೇಸ್ಟೋರ್‌ ನಿಂದ ಡೌನ್‌ಲೋಡ್‌ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.csk.farmer23_24.cropsurvey&pcampaignid=web_share

ಮೊದಲು Ekyc ಮೂಲಕ ಆಧಾರ್ ದೃಡಿಕರಿಸಿ ಮೇಲೆ ಕ್ಲಿಕ್ ಮಾಡಿ

ರೈತರ ಅಧಾರ್ ಕಾರ್ಡ ನಂಬರ್ ಅನ್ನು ಹಾಕಿ ಸಹಮತಿ ಇದೆ ಎಂದು ಟಿಕ್ ಮಾಡಿಕೊಂಡು ಕೆಳಗಡೆ ದೃಡೀಕರಣ ವಿಧಾನವನ್ನು ಆಯ್ಕೆ ಮಾಡಿ ಅಲ್ಲಿ OTP ಮೇಲೆ ಕ್ಲಿಕ್ ಮಾಡಿ "ಓಟಿಪಿ ಪಡೆಯಿರಿ" ಬಟನ್ ಮೇಲೆ ಕ್ಲಿಕ್ ಮಾಡಬೇಕು.

ತದನಂತರ ನಿಮ್ಮ ಮೊಬೈಲ್ ಗೆ ಬರುವ 6 ಅಂಕಿಯ OTP ಅನ್ನು ಹಾಕಿ ಸಲ್ಲಿಸಿ ಬಟನ್ ಮೇಲೆ ಕ್ಲಿಕ್ ಮಾಡಿದರೆ  ನಿಮ್ಮ ಎಲ್ಲಾ ವಿವರ ಇಲ್ಲಿ ತೋರಿಸುತ್ತದೆ. ಇಲ್ಲಿ ಮೊಬೈಲ್ ನಂಬರ್ ಹಾಕಿ "ಸಕ್ರಿಯಗೊಳಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ OTP ಅನ್ನು ನಮೂದಿಸಿ "ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ ಸಕ್ರಿಯಗೊಳಿಸಿಕೊಳ್ಳಬೇಕು.

ಇದಾದ ಬಳಿಕ ನಿಮ್ಮ ಸರ್ವೆ ನಂಬರ್ ಗಳು ಇಲ್ಲಿ ತೋರಿಸುತ್ತವೆ ನಂತರ ನಿಮ್ಮ ಜಮೀನಿನ್ನು ಭೇಟಿ ಮಾಡಿ ಒಂದು ಒಂದು ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ "ಬೆಳೆ ವಿವರ ದಾಖಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಪ್ರಸ್ತುತ ಬೆಳೆದಿರುವ ಬೆಳೆ ವಿವರವನ್ನು ಹಾಕಿ ಬೆಳೆಯ 2 ಪೋಟೋ ಕ್ಲಿಕ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬೇಕು.

ಒಂದೊಮ್ಮೆ ನಿಮ್ಮ ಸರ್ವೆ ನಂಬರ್ ಗಳು ಕಾಣಿಸದೇ ಇದ್ದಲ್ಲಿ "ಸರ್ವೆ ನಂಬರ್ ಸೇರಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ ಬಿಟ್ಟು ಹೋದ ಸರ್ವೆ ನಂಬರ್ ಅನ್ನು ಸೇರಿಸಬಹುದು.

ನಿಮ್ಮ ಜಮೀನಿನ ಬೆಳೆ ವಿವರ ದಾಖಲಿಸಿದ ಬಳಿಕ ಕೊನೆಯಲ್ಲಿ "ಅಪ್ಲೋಡ್ ಮಾಡಿ" ಬಟನ್ ಮೇಲೆ ಕ್ಲಿಕ್ ಮಾಡಿ ತಪ್ಪದೇ ನೀವು ಮಾಡಿರುವ ಬೆಳೆ ಸಮೀಕ್ಷೆ ವರದಿಯನ್ನು ಅಪ್ಲೋಡ್ ಮಾಡಬೇಕು ಇಲ್ಲವಾದಲ್ಲಿ ಈ ವಿವರವು ನಿಮ್ಮ ಮೊಬೈಲ್ ನಲ್ಲೇ ಉಳಿದು ಬಿಡುತ್ತದೆ.

ಸದರಿ ಮಾಹಿತಿಯನ್ನು ಬೆಳೆ ವಿಮೆ(crop insurance), ಬೆಳೆ ನಷ್ಟ ಪರಿಹಾರ(crop loss), ಬೆಂಬಲ ಬೆಲೆ(MSP) ಮತ್ತು ಸರ್ಕಾರದ ವಿವಿಧ ಯೋಜನೆ ಅಡಿ ಸವಲತ್ತುಗಳನ್ನು ಒದಗಿಸಲು ಆರ್ ಟಿ ಸಿ ಯಲ್ಲಿ ಅಳವಡಿಸಲು ಬಳಸಲಾಗುತ್ತದೆ. ರೈತರು ಹೆಚ್ಚಿನ ಆಸಕ್ತಿಯೊಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರು ತಾವೇ ಖುದ್ದಾಗಿ ದಾಖಲಿಸಬೇಕು.

ಬೆಳೆ ಸಮೀಕ್ಷೆಯ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಲ್ಲಿ, ಬೆಳೆ ವಿಮಾ ಯೋಜನೆ ಅಡಿ ಸರ್ವೆ ನಂಬರ್‌ ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಳನ್ನು ಕೈಗೊಳ್ಳಲು ಸರ್ವೆ ನಂಬರ್‌ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಸಾದ್ಯವಾಗುತ್ತದೆ.

ಅಲ್ಲದೇ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆ ಅನುಷ್ಠಾನಕ್ಕಾಗಿ, ಆರ್‌.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಬಳಸಬಹುದಾಗಿದೆ. ಜಿಲ್ಲೆಯ ರೈತ ಬಾಂಧವರು ತಪ್ಪದೇ ತಮ್ಮ ಜಮೀನಲ್ಲಿರುವ ಬೆಳೆಗಳ ವಿವರವನ್ನು ತಪ್ಪದೇ ದಾಖಲಿಸಬೇಕು. ಗ್ರಾಮಗಳಲ್ಲಿರುವ ವಿದ್ಯಾವಂತ ಯುವಕರು ರೈತರ ಬೆಳೆ ಸಮೀಕ್ಷೆ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ತಮ್ಮ ಹಳ್ಳಿಯ ರೈತ ಸಮುದಾಯದ ಬೆಳೆ ಮಾಹಿತಿ ದಾಖಲಿಸಬಹುದು. ಬೆಳೆ ವಿವರ ದಾಖಲಾಗದಿದ್ದಲ್ಲಿ ಸರ್ಕಾರದ ಯೋಜನೆಗಳಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಗ್ರಾಮದ ಖಾಸಗಿ ನಿವಾಸಿ (ಪಿ.ಆರ್‌), ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾ ಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಇಲಾಖೆಯ ಅಧಿಕಾರಿಗಳನ್ನು ಮತ್ತು ಟೋಲ್‌ ಫ್ರೀ ಸಂಖ್ಯೆ 8448447715ಗೆ ಸಂಪರ್ಕಿಸಬಹುದಾಗಿದೆ

]]>
Sat, 28 Jun 2025 18:59:21 +0530 shivuagrico
ಜಿಲ್ಲಾವಾರು,ಬೆಳೆವಾರು ಬೆಳೆವಿಮೆ ದಿನಾಂಕ ಬಿಡುಗಡೆ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ&crop insurance last date https://krushirushi.in/Crop-insurance-last-date-2190 https://krushirushi.in/Crop-insurance-last-date-2190 ಜಿಲ್ಲಾವಾರು,ಬೆಳೆವಾರು ಬೆಳೆವಿಮೆ ದಿನಾಂಕ ಬಿಡುಗಡೆ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ-crop insurance last date  

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2025-26" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ

ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ

]]>
Sat, 28 Jun 2025 07:40:12 +0530 shivuagrico
ಪಿಎಂ ಕಿಸಾನ್ 20ನೇ ಕಂತಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್,ಈ ಪಟ್ಟಿಯಲ್ಲಿರುವ 7 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ&pmkisan 20th instalment ineligible list https://krushirushi.in/Pmkisan-20th-instalment-ineligible-list-2189 https://krushirushi.in/Pmkisan-20th-instalment-ineligible-list-2189 ಪಿಎಂ ಕಿಸಾನ್ 20ನೇ ಕಂತಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್,ಈ ಪಟ್ಟಿಯಲ್ಲಿರುವ 7 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ-pmkisan 20th instalment ineligible list

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ನೋಂದಾಯಿಸಿದ್ಧ ರಾಜ್ಯದ 7 ಲಕ್ಷಕ್ಕೂ ಅಧಿಕ ರೈತರನ್ನು ಅನರ್ಹಗೊಳಿಸಲಾಗಿದೆ.


ರಾಜ್ಯದಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಆರಂಭವಾದ ಒಂದು ವರ್ಷದಲ್ಲಿ 53.81 ಲಕ್ಷಕ್ಕೂ ಅಧಿಕ ರೈತರು ನೋಂದಣಿ ಮಾಡಿಸಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದರು.

ಇವರ ಪೈಕಿ 7 ಲಕ್ಷಕ್ಕೂ ಅಧಿಕ ರೈತರನ್ನು ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಅನರ್ಹಗೊಳಿಸಲಾಗಿದೆ.

ಭೂ ದಾಖಲೆಗಳ ಕೊರತೆ, ಇ-ಕೆವೈಸಿ ಸಮಸ್ಯೆ, ತೆರಿಗೆ ಪಾವತಿದಾರರು, ಸರ್ಕಾರಿ ನೌಕರಿ ಹೊಂದಿರುವುದು, ಸಾಂವಿಧಾನಿಕ ಹುದ್ದೆಗಳಲ್ಲಿ ಕಾರ್ಯನಿರ್ವಹಣೆ ಸೇರಿದಂತೆ ಅನೇಕ ಕಾರಣಗಳಿಂದ ಹಂತ ಹಂತವಾಗಿ ಪರಿಶೀಲನೆ ನಡೆಸಿ ಸುಮಾರು 7 ಲಕ್ಷ ರೈತರನ್ನು ಅನರ್ಹಗೊಳಿಸಲಾಗಿದೆ.

2018ರಲ್ಲಿ ಯೋಜನೆ ಆರಂಭವಾದ ಸಂದರ್ಭದಲ್ಲಿ 19,819 ರೈತರು ನೋಂದಾಯಿಸಿದ್ದು, 2019-20 ರಲ್ಲಿ 53,81,184 ರೈತರು ನೋಂದಾಯಿಸಿದ್ದರು. ಅರ್ಹರಲ್ಲದವರು ಕೂಡ ಹೆಸರು ನೋಂದಾಯಿಸಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದರಿಂದ ಪರಿಶೀಲನೆ ಕಾರ್ಯ ಆರಂಭಿಸಲಾಗಿದ್ದು, ಈಗ 47.50 ಲಕ್ಷ ರೈತರು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ.

ರೈತರ ನೋಂದಣಿ ಕಾರ್ಯ ನಿರಂತರವಾಗಿ ನಡೆಯುವುದರಿಂದ ಪ್ರತಿ ಕಂತು ವಿತರಣೆಯ ಸಂದರ್ಭದಲ್ಲಿ ರೈತರ ಸಂಖ್ಯೆ ಹೆಚ್ಚು ಕಡಿಮೆಯಾಗುತ್ತದೆ. ಅರ್ಹರನ್ನು ಸೇರಿಸುವುದು, ಅನರ್ಹರನ್ನು ಕೈಬಿಡುವ ಪ್ರಕ್ರಿಯೆ ನಿರಂತರವಾಗಿರುತ್ತದೆ.

ಆಧಾರ್ ಮತ್ತು ಪಹಣಿಯೊಂದಿಗೆ ಫ್ರೂಟ್ಸ್ ಐಡಿ ತಂತ್ರಾಂಶದಲ್ಲಿ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿ ಇ-ಕೆವೈಸಿಯೊಂದಿಗೆ ಕಿಸಾನ್ ಸಮ್ಮಾಣ್ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಜಮೀನಿನ ಮಾಲೀಕರು ನಿಧನರಾಗಿದ್ದಲ್ಲಿ ಇತರೆ ವಾರಸುದಾರರು ಪೌತಿ ಖಾತೆ ಮಾಡಿಸಿದರೆ ಯೋಜನೆಗೆ ಅರ್ಹರಾಗುತ್ತಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2019 ರ ನಂತರ ಜಮೀನು ಖರೀದಿಸಿದವರು ಮತ್ತು ತಂದೆಯ ಜಮೀನನ್ನು ಭಾಗ ಮಾಡಿಕೊಂಡಿದ್ದರೆ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಲಾಗಿದೆ. ಒಂದು ವೇಳೆ ತಾಂತ್ರಿಕ ದೋಷ, ಇ-ಕೆವೈಸಿ ಸಮಸ್ಯೆಯಿಂದ ಯಾವುದೇ ರೈತರ ಹೆಸರು ಪಟ್ಟಿಯಿಂದ ಹೊರಗುಳಿದಿದ್ದರೆ ಮತ್ತೊಮ್ಮೆ ಪರಿಶೀಲನೆಗೆ ಒಳಪಡಿಸಲು ಅವಕಾಶವಿದೆ. ಈ ಯೋಜನೆಯಡಿ ವಾರ್ಷಿಕ 6,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. 3 ಕಂತುಗಳಲ್ಲಿ 4 ತಿಂಗಳಿಗೊಮ್ಮೆ ನೇರವಾಗಿ ರೈತರ ಖಾತೆಗೆ 2 ಸಾವಿರ ರೂ. ವರ್ಗಾಯಿಸಲಾಗುವುದು.

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 20th instalment ineligible list


ವರ್ಷದಲ್ಲಿ ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯ (ಪಿಎಂ-ಕಿಸಾನ್) ಫಲಾನುಭವಿಗಳ ಸಂಖ್ಯೆ(pmkisan 20th instalment ineligible list) ಐದು ಲಕ್ಷದಿಂದ ಆರು ಲಕ್ಷದಷ್ಟು ಕುಸಿತವಾಗಿದೆ.


ಲೋಕಸಭೆಯಲ್ಲಿ ಮೈಸೂರು ಸಂಸದ ಯದುವೀ‌ರ್ ಒಡೆಯ‌ರ್ ಮಂಗಳವಾರ ಕೇಳಿದ ಪ್ರಶ್ನೆಗೆ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್ ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ.


13ನೇ ಕಂತಿನವರೆಗೆ (2023ರ ಮಾರ್ಚ್) ರಾಜ್ಯದ ಫಲಾನುಭವಿಗಳ ಸಂಖ್ಯೆ 49 ಲಕ್ಷದಷ್ಟು ಇತ್ತು. 14ನೇ ಕಂತಿನಲ್ಲೂ ಫಲಾನುಭವಿಗಳ ಸಂಖ್ಯೆ 49.34 ಲಕ್ಷ ಆಗಿತ್ತು. 15ನೇ ಕಂತಿನಲ್ಲಿ ಈ ಸಂಖ್ಯೆ 43.78 ಲಕ್ಷಕ್ಕೆ ಕುಸಿಯಿತು. ಆ ಬಳಿಕ ಸಂಖ್ಯೆಯಲ್ಲಿ ಗಣನೀಯ ಏರಿಕೆ ಆಗಿಲ್ಲ.


ಪಿಎಂ- ಕಿಸಾನ್ ಯೋಜನೆಯಡಿ ಕೃಷಿಕರಿಗೆ ವಾರ್ಷಿಕ ₹6 ಸಾವಿರ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಈ ಮೊತ್ತವನ್ನು ₹8 ಸಾವಿರ ಅಥವಾ ₹12 ಸಾವಿರಕ್ಕೆ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Pmkisan 19th instalment ineligible list-ಪಿಎಂ ಕಿಸಾನ್ 19ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Fri, 27 Jun 2025 12:20:53 +0530 shivuagrico
Bele vime&ವಾರದೊಳಗೆ ಬೆಳೆ ವಿಮೆ ಪರಿಹಾರ&ಕೃಷಿ ಸಚಿವ ಚೆಲುವರಾಯಸ್ವಾಮಿ https://krushirushi.in/Bele-vime-2188 https://krushirushi.in/Bele-vime-2188 Bele vime-ವಾರದೊಳಗೆ ಬೆಳೆ ವಿಮೆ ಪರಿಹಾರ-ಕೃಷಿ ಸಚಿವ ಚೆಲುವರಾಯಸ್ವಾಮಿ

ವಾರದಲ್ಲಿ ವಿಮೆ ಹಣ ಜಮಾ: 'ಬೆಳೆ ವಿಮೆ' 
ಪರಿಹಾರ ಮೊತ್ತ ವಿಳಂಬವಾಗುತ್ತಿರುವುದಕ್ಕೆ ಹೆಚ್ಚಿನ ಕರೆಗಳ ಬಂದವು. ರಾಣೆಬೆನ್ನೂರು ತಾಲೂಕಿನ ಜೋಯಿಸರ ಹಳ್ಳಿಯ ಶಂಕರಪ್ಪ ರಾಮಪ್ಪ, ಕಲಬುರಗಿಯ ಬಾಬು ಸಾಬ್ ಪಾಟೀಲ್, ಶಿರಾ ತಾಲೂಕಿನ ತಿಮ್ಮರಾಜು, ವಿಜಯಪುರದ ಹನುಮಂತ, ರಾಯಚೂರು ಮಾನ್ವಿ ತಾಲೂಕಿನ ಮಿರಾಜುದ್ದೀನ್, ಗೌರಿಬಿದನೂರು ತಾಲೂಕಿನ ಸತೀಶ್ ಸೇರಿದಂತೆ ಇನ್ನೂ ಕೆಲವರು ಪ್ರಸ್ತಾಪಿಸಿದ ಬೆಳೆ ವಿಮೆ ಸೂಕ್ತ ಸಮಯಕ್ಕೆ ಬಾರದಿರುವ ವಿಚಾರಕ್ಕೆ ಸಚಿವರು ಸ್ಪಂದಿಸಿದರು. 



"ಸಮೀಕ್ಷೆ ನಡೆಸಿ ಬೆಳೆ ಹಾನಿಯಾಗಿರುವುದು ಖಾತರಿಯಾಗಷ್ಟೇ ಬೆಳೆ ವಿಮೆ ಪರಿಹಾರ ನೀಡಲಾಗುತ್ತದೆ. ಈಗಾಗಲೇ ಬೆಳೆ ವಿಮೆ ಹಣ ರೈತರ ಖಾತೆಗೆ ಜಮೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕಳೆದ ವರ್ಷದ ಬೆಳೆ ವಿಮೆ ಪರಿಹಾರ ವಾರರೊಳಗೆ ರೈತರ ಖಾತೆಗೆ ಜಮೆಯಾಗಲಿದೆ. ಕಲಬುರಗಿಯಲ್ಲಿ ಕಳೆದ ಅಕ್ಟೋಬ‌ರ್-ನವೆಂಬರ್ ನಲ್ಲಿ ಆದ ಬೆಳೆಹಾನಿಗೆ 600 ಕೋಟಿ ಪರಿಹಾರ ನೀಡಲಾಗಿದೆ ಎಂದು ಹೇಳಿದರು.

 ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
Fri, 27 Jun 2025 08:13:48 +0530 shivuagrico
ಕೊನೆಗೂ ಜಮಾ ಆಯ್ತು 3 ತಿಂಗಳ ಪೇಂಡಿಗ್ 6000 ರೂಪಾಯಿ ಗೃಹಲಕ್ಷ್ಮಿ ಹಣ&Gruhalakshmi list https://krushirushi.in/Gruhalakshmi-list-2187 https://krushirushi.in/Gruhalakshmi-list-2187 ಕೊನೆಗೂ ಜಮಾ ಆಯ್ತು 3 ತಿಂಗಳ ಪೇಂಡಿಗ್ 6000 ರೂಪಾಯಿ ಗೃಹಲಕ್ಷ್ಮಿ ಹಣ-Gruhalakshmi list

ಬಾಕಿ ಉಳಿದಿರುವ ಮೂರು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಒಟ್ಟಿಗೆ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನವರಿ, ಫೆಬ್ರವರಿ, ಮಾರ್ಚ್ ಈ ಮೂರು ತಿಂಗಳ ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.

ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್‌ ಖಾತೆಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. 

 

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Thu, 26 Jun 2025 08:44:47 +0530 shivuagrico
Direct benefit transfer&ಆಧಾರ್ ನಂಬರ್ ಹಾಕಿ ಯಾವ ಯೋಜನೆಯಿಂದ ಎಷ್ಟು ಹಣ ಜಮೆ ಆಗಿದೆ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ https://krushirushi.in/Krushirushi-2186 https://krushirushi.in/Krushirushi-2186 Direct benefit transfer-ಆಧಾರ್ ನಂಬರ್ ಹಾಕಿ ಯಾವ ಯೋಜನೆಯಿಂದ ಎಷ್ಟು ಹಣ ಜಮೆ ಆಗಿದೆ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಯೋಜನೆಗಳ ಪಟ್ಟಿ ದೊರೆಯಲಿದೆ, ಅದರಲ್ಲಿ ನಿಮಗೆ ಬೇಕಾದ ಯೋಜನೆಯ ಮೇಲೆ ಕ್ಲಿಕ್ ಮಾಡಿ

ಉದಾಹರಣೆಗೆ ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿ(Gruhalakahmi)

ಈ ಕೆಳಗಿನಂತೆ ಇಲ್ಲಿಯವರೆಗೂ ಹಣ ಜಮಾ ಆಗಿರುವ ಮಾಹಿತಿ ತೋರಿಸುತ್ತದೆ.

]]>
Wed, 25 Jun 2025 10:18:51 +0530 shivuagrico
Crop you can insure&ಮುಂಗಾರಿನ ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಬೇಕು? ಚೆಕ್ ಮಾಡಿಕೊಂಡು ಬೆಳೆವಿಮೆ ಕಟ್ಟಿ https://krushirushi.in/Crop-you-can-insure-2185 https://krushirushi.in/Crop-you-can-insure-2185 Crop you can insure-ಮುಂಗಾರಿನ ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಬೇಕು? ಚೆಕ್ ಮಾಡಿಕೊಂಡು ಬೆಳೆವಿಮೆ ಕಟ್ಟಿ


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ


Farmer ಕಾಲಂನಲ್ಲಿ "
Crop you can insure" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ selet ಮಾಡಿ Display ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಯಾವ ಬೆಳೆಗೆ ಎಷ್ಟು ಬೆಳೆವಿಮೆ(crop insurance) ಸಿಗಲಿದೆ ಎಂಬ ಮಾಹಿತಿ ದೊರೆಯಲಿದೆ.

ವಿಡಿಯೊ ನೋಡಿ

https://youtu.be/KIjiKXTDp2E?si=gfKzJeykEkROrM_m 

40° ಟೆಂಪರೇಚರ್ ನಲ್ಲಿ ಪೈನಾಪಲ್/ಅನಾನಸ್ ಬೆಳೆದು ಎಕರೆಗೆ 6 ಲಕ್ಷ ಆದಾಯ ಗಳಿಸಿದ ರೈತ



Belevime last date 2024-ಮುಂಗಾರು ಬೆಳೆವಿಮೆ ನೊಂದಣೆ ಪ್ರಾರಂಭ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ

ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ

]]>
Tue, 24 Jun 2025 19:44:58 +0530 shivuagrico
Aridra male&ಇಂದಿನಿಂದ ಆರಿದ್ರ ಮಳೆ,ಇಲ್ಲದಿದ್ದರೆ ದರಿದ್ರ https://krushirushi.in/Aridra-male-2183 https://krushirushi.in/Aridra-male-2183 Aridra male-ಇಂದಿನಿಂದ ಆರಿದ್ರ ಮಳೆ,ಇಲ್ಲದಿದ್ದರೆ ದರಿದ್ರ

 

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು ಜಿಲ್ಲೆಯಲ್ಲಿ ಮತ್ತು ದಕ್ಷಿಣ ಕನ್ನಡದ ಸುಳ್ಯ ತಾಲ್ಲೂಕು ಸ್ವಲ್ಪ ಕಡಿಮೆ ಇದ್ದರೂ, ಮಧ್ಯಾಹ್ನ ನಂತರ ಹೆಚ್ಚಾಗುವ ಸಾಧ್ಯತೆ ಇದೆ.


ಈಗಿನಂತೆ ಜೂನ್ 23ರಿಂದ ಸ್ವಲ್ಪ ಕಡಿಮೆ ಇದ್ದರೂ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗುವ ಸಾಧ್ಯತೆ ಕಡಿಮೆ ಇರಬಹುದು. ಜೂನ್ 29ರಿಂದ ಅವಕಾಶ ಸಿಗಬಹುದು. 

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ಜೂನ್ 28ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಜೂನ್ 26ರಿಂದ 28ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ರಾಜ್ಯದ ಹಲವೆಡೆ ಕ್ಷೀಣವಾಗಿದ್ದ ಮಳೆ, ಕರಾವಳಿ ವ್ಯಾಪ್ತಿಯ ಪ್ರದೇಶಗಳಲ್ಲಿ ಜೂ.23ರಿಂದ ಹಾಗೂ ಮಲೆನಾಡು,ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಜೂ.26ರಿಂದ ಬಿರುಸುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.


ಉಡುಪಿಯ ಕಾರ್ಕಳ, ಸಿದ್ದಾಪುರ, ಉತ್ತರ ಕನ್ನಡದ ಕದ್ರಾ, ಕ್ಯಾಸಲ್ ರಾಕ್,ಯಲ್ಲಾಪುರ, ಗೇರುಸೊಪ್ಪ, ದಕ್ಷಿಣ ಕನ್ನಡದ ಮೂಡುಬಿದರೆ, ಮಾಣಿ, ಉಪ್ಪಿನಂಗಡಿ, ಕೊಡಗಿನ ಭಾಗಮಂಡಲ, ಚಿಕ್ಕಮಗಳೂರಿನ ಕೊಟ್ಟಿಗೆಹಾರ ಮತ್ತು ಶೃಂಗೇರಿಯಲ್ಲಿ ಭಾನುವಾರ ಭರ್ಜರಿ ಮಳೆ ಸುರಿದಿತ್ತು.


ಕರಾವಳಿ ಭಾಗದ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾದರೆ, ದಕ್ಷಿಣ ಕರ್ನಾಟಕ ವ್ಯಾಪ್ತಿಯ ಒಂದೆರಡು ಸ್ಥಳಗಳಲ್ಲಿ ಸಾಧಾರಣವಾಗಿತ್ತು.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜೂ.23ರಿಂದ ಜೂ.29ರವರೆಗೆ ಬಿರುಸಾಗಿ ವರ್ಷಧಾರೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಗದಗದಲ್ಲಿ ಜೂ.26ರಿಂದ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಇರಲಿದೆ. ಈ ಸಂದರ್ಭದಲ್ಲಿ ಕೆಲವು ಪ್ರದೇಶಗಳಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ,ಯಾದಗಿರಿಯಲ್ಲಿ ಮುಂದಿನ 4 ದಿನ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ

]]>
Mon, 23 Jun 2025 12:33:36 +0530 shivuagrico
Sala manna&ರೈತರ ಬಾಕಿ 300 ಕೋಟಿ ಬೆಳೆಸಾಲಮನ್ನಾ&ಸಿಎಂ ಸಿದ್ದರಾಮಯ್ಯ,ಹಾಗಾದರೆ ಯಾವ ಬಾಕಿ ರೈತರ ಸಾಲಮನ್ನಾ ಆಗಲಿದೆ,ಸಾಲಮನ್ನಾ ಆಗಲು ಬೇಕಾದ ದಾಖಲೆ ಹಾಗೂ ಅರ್ಹತೆಗಳೇನು? https://krushirushi.in/Sala-manna-2184 https://krushirushi.in/Sala-manna-2184 Sala manna-ರೈತರ ಸಾಲಮನ್ನಾದ 300 ಕೋಟಿ ಬಾಕಿ ತಿರಿಸುತ್ತೇವೆ-ಸಿಎಂ ಸಿದ್ದರಾಮಯ್ಯ

ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ರೈತರ ಸಾಲ ಮನ್ನಾ (Loan Waiver) ಮಾಡಿ ಬಾಕಿ ಉಳಿಸಿದ್ದ 300 ಕೋಟಿ ಹಣವನ್ನು ಕಾಂಗ್ರೆಸ್ ಸರ್ಕಾರ ಮುಂದಿನ ದಿನದಲ್ಲಿ ತೀರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಹಕಾರ ಸಚಿವ ಕೆಎನ್ ರಾಜಣ್ಣ ಅವರ 75ನೇ ವರ್ಷದ ‘ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಹೆಸರು ಪಡೆದುಕೊಂಡರು. ಆದರೆ ಬಾಕಿಯನ್ನು ನಮ್ಮ ಸರ್ಕಾರ ತೀರಿಸಬೇಕಾಗಿದೆ. ಹೆಸರು ಅವರಿಗೆ, ಹೊರೆ ಹೊತ್ತುಕೊಂಡಿದ್ದು ನಮ್ಮ ಸರ್ಕಾರ ಎಂದರು.

2018 ರಿಂದ ಇಲ್ಲಿಯವರೆಗೂ ಕರ್ನಾಟಕದಲ್ಲಿ ಯಾರಿಗೆಲ್ಲಾ ಎಷ್ಟು ಸಾಲ ಮನ್ನಾ ಆಗಿದೆ? ಹಾಗಾದರೆ ಯಾವ ಬಾಕಿ ರೈತರ ಸಾಲಮನ್ನಾ ಆಗಲಿದೆ,ಸಾಲಮನ್ನಾ ಆಗಲು ಬೇಕಾದ ದಾಖಲೆ ಹಾಗೂ ಅರ್ಹತೆಗಳೇನು? ಹೀಗೆ ಚೆಕ್ ಮಾಡಿ-Bele sala manna status 

2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಇದ್ದಾಗ ರಾಜ್ಯದ ರೈತರ ಸಾಲಮನ್ನಾ(Bele sala manna) ಮಾಡಿದ್ದರು.ಆದರೆ ಅದರಲ್ಲಿ ಕೇಲವು ರೈತರ ದಾಖಲೆಗಳ ಕೊರತೆಯಿಂದಾಗಿ ಬಾಕಿ ಉಳಿದ ಪ್ರಕರಣಗಳಲ್ಲಿ ದಾಖಲಾತಿಗಳನ್ನು ಸಲ್ಲಿಸಿದ ನಂತರ ಸಾಲಮನ್ನಾ ಆಗುತ್ತಿದೆ.ಹಾಗಾದರೆ ಈ ಲೇಖನದಲ್ಲಿ ಯಾವೆಲ್ಲಾ ದಾಖಲಾತಿಗಳು ಬೇಕಾಗಬಹುದು ಎಂದು ಚೆಕ್ ಮಾಡಬಹುದು.

ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

ನಂತರ "Revenue department/ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು"(Revenue department services)ಮೇಲೆ ಕ್ಲಿಕ್ ಮಾಡಿ

ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ"(farmer) ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು"(Submit)ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ(Crop loan wavier) ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ(Bele sala manna list) ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ/Revenue department" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು/Revenue department services" ಮೇಲೆ ಕ್ಲಿಕ್ ಮಾಡಿ

ನಂತರ "CLWS ರೈತನ ಅರ್ಹತೆ" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್(bank) select ಮಾಡಿ,ಸಲ್ಲಿಸು/Submit ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ(crop loan wavier) ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ

]]>
Mon, 23 Jun 2025 06:12:11 +0530 shivuagrico
ಸ್ವಾವಲಂಭಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ 3 ಲಕ್ಷ ರೂಪಾಯಿ ಸಬ್ಸಿಡಿ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ&Vehicle subsidy scheme  https://krushirushi.in/Vehicle-subsidy-scheme-2182 https://krushirushi.in/Vehicle-subsidy-scheme-2182 ಸ್ವಾವಲಂಭಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ 3 ಲಕ್ಷ ರೂಪಾಯಿ ಸಬ್ಸಿಡಿ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Vehicle subsidy scheme 

ಸ್ವಾವಲಂಬಿ ಸಾರಥಿ ಯೋಜನೆ

ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.

ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು

ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.

ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.

ಡ್ರೈವಿಂಗ್ ಲೈಸೆನ್ಸ್

ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.

ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಹಿಂದುಳಿದ ವರ್ಗದವರಾಗಿರಬೇಕು.


ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಬ್ಯಾಂಕ್ ಪಾಸ್ ಬುಕ್

ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ

(DL) ಡ್ರೈವಿಂಗ್ ಲೈಸೆನ್ಸ್

ಫೋಟೋ

ಮೊಬೈಲ್ ನಂಬರ್

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in  ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಿ ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್, 31 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು.

]]>
Sun, 22 Jun 2025 17:21:11 +0530 shivuagrico
Crop survey 2025&26:ಬೆಳೆ ಸಮೀಕ್ಷೆ ಮಾಡದಿದ್ದರೆ ಬೆಳೆವಿಮೆ,ಬೆಳೆಹಾನಿ ಪರಿಹಾರ ಸಿಗಲ್ಲ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಮಾಡಿ ಬೆಳೆ ಸಮೀಕ್ಷೆ https://krushirushi.in/Crop-survey-2025-26 https://krushirushi.in/Crop-survey-2025-26 Crop survey 2025-26:ಬೆಳೆ ಸಮೀಕ್ಷೆ ಮಾಡದಿದ್ದರೆ ಬೆಳೆವಿಮೆ,ಬೆಳೆಹಾನಿ ಪರಿಹಾರ ಸಿಗಲ್ಲ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಮಾಡಿ ಬೆಳೆ ಸಮೀಕ್ಷೆ

ಕರ್ನಾಟಕ ಸರ್ಕಾರ ಈ ಆಡಳಿತ ಮತ್ತು ಕೃಷಿ ಇಲಾಖೆ ಇವರ ಸಹಯೋಗದೊಂದಿಗೆ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ(crop survey) ರೈತರ ಆಪ್ ಬಿಡುಗಡೆ ಮಾಡಿದ್ದು, ರೈತರು ಗೂಗಲ್ ಪ್ಲೇ ಸ್ಟೋರ್ ನಿಂದ ಮುಂಗಾರು ರೈತರ ಬೆಳೆ ಸಮೀಕ್ಷೆ 2025-26 ಆಪ್ ಡೌನ್ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಅಪ್ಲೋಡ್ ಮಾಡಬಹುದು.

ರೈತ ಬಾಂಧವರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ಮುಂಗಾರು ರೈತರ ಬೆಳೆ ಸಮೀಕ್ಷೆ 2025-26 ಎಂಬ ಮೊಬೈಲ್‌ ಆ್ಯಪ್‌ ಗೂಗಲ್‌ ಪ್ಲೇಸ್ಟೋರ್‌ ನಿಂದ ಡೌನ್‌ಲೋಡ್‌ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.csk.farmer23_24.cropsurvey&pcampaignid=web_share

ಮೊದಲು Ekyc ಮೂಲಕ ಆಧಾರ್ ದೃಡಿಕರಿಸಿ ಮೇಲೆ ಕ್ಲಿಕ್ ಮಾಡಿ

ರೈತರ ಅಧಾರ್ ಕಾರ್ಡ ನಂಬರ್ ಅನ್ನು ಹಾಕಿ ಸಹಮತಿ ಇದೆ ಎಂದು ಟಿಕ್ ಮಾಡಿಕೊಂಡು ಕೆಳಗಡೆ ದೃಡೀಕರಣ ವಿಧಾನವನ್ನು ಆಯ್ಕೆ ಮಾಡಿ ಅಲ್ಲಿ OTP ಮೇಲೆ ಕ್ಲಿಕ್ ಮಾಡಿ "ಓಟಿಪಿ ಪಡೆಯಿರಿ" ಬಟನ್ ಮೇಲೆ ಕ್ಲಿಕ್ ಮಾಡಬೇಕು.

ತದನಂತರ ನಿಮ್ಮ ಮೊಬೈಲ್ ಗೆ ಬರುವ 6 ಅಂಕಿಯ OTP ಅನ್ನು ಹಾಕಿ ಸಲ್ಲಿಸಿ ಬಟನ್ ಮೇಲೆ ಕ್ಲಿಕ್ ಮಾಡಿದರೆ  ನಿಮ್ಮ ಎಲ್ಲಾ ವಿವರ ಇಲ್ಲಿ ತೋರಿಸುತ್ತದೆ. ಇಲ್ಲಿ ಮೊಬೈಲ್ ನಂಬರ್ ಹಾಕಿ "ಸಕ್ರಿಯಗೊಳಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ OTP ಅನ್ನು ನಮೂದಿಸಿ "ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ ಸಕ್ರಿಯಗೊಳಿಸಿಕೊಳ್ಳಬೇಕು.

ಇದಾದ ಬಳಿಕ ನಿಮ್ಮ ಸರ್ವೆ ನಂಬರ್ ಗಳು ಇಲ್ಲಿ ತೋರಿಸುತ್ತವೆ ನಂತರ ನಿಮ್ಮ ಜಮೀನಿನ್ನು ಭೇಟಿ ಮಾಡಿ ಒಂದು ಒಂದು ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ "ಬೆಳೆ ವಿವರ ದಾಖಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಪ್ರಸ್ತುತ ಬೆಳೆದಿರುವ ಬೆಳೆ ವಿವರವನ್ನು ಹಾಕಿ ಬೆಳೆಯ 2 ಪೋಟೋ ಕ್ಲಿಕ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬೇಕು.

ಒಂದೊಮ್ಮೆ ನಿಮ್ಮ ಸರ್ವೆ ನಂಬರ್ ಗಳು ಕಾಣಿಸದೇ ಇದ್ದಲ್ಲಿ "ಸರ್ವೆ ನಂಬರ್ ಸೇರಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ ಬಿಟ್ಟು ಹೋದ ಸರ್ವೆ ನಂಬರ್ ಅನ್ನು ಸೇರಿಸಬಹುದು.

ನಿಮ್ಮ ಜಮೀನಿನ ಬೆಳೆ ವಿವರ ದಾಖಲಿಸಿದ ಬಳಿಕ ಕೊನೆಯಲ್ಲಿ "ಅಪ್ಲೋಡ್ ಮಾಡಿ" ಬಟನ್ ಮೇಲೆ ಕ್ಲಿಕ್ ಮಾಡಿ ತಪ್ಪದೇ ನೀವು ಮಾಡಿರುವ ಬೆಳೆ ಸಮೀಕ್ಷೆ ವರದಿಯನ್ನು ಅಪ್ಲೋಡ್ ಮಾಡಬೇಕು ಇಲ್ಲವಾದಲ್ಲಿ ಈ ವಿವರವು ನಿಮ್ಮ ಮೊಬೈಲ್ ನಲ್ಲೇ ಉಳಿದು ಬಿಡುತ್ತದೆ.

ಸದರಿ ಮಾಹಿತಿಯನ್ನು ಬೆಳೆ ವಿಮೆ(crop insurance), ಬೆಳೆ ನಷ್ಟ ಪರಿಹಾರ(crop loss), ಬೆಂಬಲ ಬೆಲೆ(MSP) ಮತ್ತು ಸರ್ಕಾರದ ವಿವಿಧ ಯೋಜನೆ ಅಡಿ ಸವಲತ್ತುಗಳನ್ನು ಒದಗಿಸಲು ಆರ್ ಟಿ ಸಿ ಯಲ್ಲಿ ಅಳವಡಿಸಲು ಬಳಸಲಾಗುತ್ತದೆ. ರೈತರು ಹೆಚ್ಚಿನ ಆಸಕ್ತಿಯೊಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರು ತಾವೇ ಖುದ್ದಾಗಿ ದಾಖಲಿಸಬೇಕು.

ಬೆಳೆ ಸಮೀಕ್ಷೆಯ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಲ್ಲಿ, ಬೆಳೆ ವಿಮಾ ಯೋಜನೆ ಅಡಿ ಸರ್ವೆ ನಂಬರ್‌ ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಳನ್ನು ಕೈಗೊಳ್ಳಲು ಸರ್ವೆ ನಂಬರ್‌ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಸಾದ್ಯವಾಗುತ್ತದೆ.

ಅಲ್ಲದೇ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆ ಅನುಷ್ಠಾನಕ್ಕಾಗಿ, ಆರ್‌.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಬಳಸಬಹುದಾಗಿದೆ. ಜಿಲ್ಲೆಯ ರೈತ ಬಾಂಧವರು ತಪ್ಪದೇ ತಮ್ಮ ಜಮೀನಲ್ಲಿರುವ ಬೆಳೆಗಳ ವಿವರವನ್ನು ತಪ್ಪದೇ ದಾಖಲಿಸಬೇಕು. ಗ್ರಾಮಗಳಲ್ಲಿರುವ ವಿದ್ಯಾವಂತ ಯುವಕರು ರೈತರ ಬೆಳೆ ಸಮೀಕ್ಷೆ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ತಮ್ಮ ಹಳ್ಳಿಯ ರೈತ ಸಮುದಾಯದ ಬೆಳೆ ಮಾಹಿತಿ ದಾಖಲಿಸಬಹುದು. ಬೆಳೆ ವಿವರ ದಾಖಲಾಗದಿದ್ದಲ್ಲಿ ಸರ್ಕಾರದ ಯೋಜನೆಗಳಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಗ್ರಾಮದ ಖಾಸಗಿ ನಿವಾಸಿ (ಪಿ.ಆರ್‌), ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾ ಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಇಲಾಖೆಯ ಅಧಿಕಾರಿಗಳನ್ನು ಮತ್ತು ಟೋಲ್‌ ಫ್ರೀ ಸಂಖ್ಯೆ 8448447715ಗೆ ಸಂಪರ್ಕಿಸಬಹುದಾಗಿದೆ

]]>
Sun, 22 Jun 2025 07:44:43 +0530 shivuagrico
Health insurance&ರಾಜ್ಯದ ಗುತ್ತಿಗೆ,ಹೊರಗುತ್ತಿಗೆ ನೌಕರರಿಗೆ 5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ https://krushirushi.in/Health-insurance-2180 https://krushirushi.in/Health-insurance-2180 Health insurance-ರಾಜ್ಯದ ಗುತ್ತಿಗೆ,ಹೊರಗುತ್ತಿಗೆ ನೌಕರರಿಗೆ 5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ


ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವ ಧನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವವರಿಗೆ ನಗದುರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.


ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರು, ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಮೂರು ಲಕ್ಷ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5 ಲಕ್ಷ ರೂ.ವರೆಗೆ ನಗದುರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.

]]>
Sat, 21 Jun 2025 16:36:33 +0530 shivuagrico
Tur dal rate&ತೊಗರಿ ಬೆಳೆ ಬೆಲೆಯಲ್ಲಿ ಬಾರಿ ಇಳಿಕೆ,ಗ್ರಾಹಕರು ಫುಲ್ ಖುಷ್,ರೈತರಿಗೆ ಕೊಂಚ ನಿರಾಸೆ! https://krushirushi.in/Tur-dal-rate-2179 https://krushirushi.in/Tur-dal-rate-2179 Tur dal rate-ತೊಗರಿ ಬೇಳೆ ಬೆಲೆಯಲ್ಲಿ ಬಾರಿ ಇಳಿಕೆ,ಗ್ರಾಹಕರು ಫುಲ್ ಖುಷ್,ರೈತರಿಗೆ ಕೊಂಚ ನಿರಾಸೆ!

ತೊಗರಿ ಕಣಜ ಕಲಬುರಗಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಹೆಚ್ಚಿನ ಇಳುವರಿ ಬಂದಿರುವುದರ ಜೊತೆಗೆ ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶದಲ್ಲಿಯೂ ಉತ್ಪಾದನೆ ಹೆಚ್ಚಿದ ಪರಿಣಾಮ ತೊಗರಿ ಬೇಳೆಯ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಮೂರ್ನಾಲ್ಕು ತಿಂಗಳ ಹಿಂದೆ ಪ್ರತಿ ಕೆ.ಜಿಗೆ ₹120 ಇದ್ದ ತೊಗರಿ ಬೇಳೆ ದರ ಈಗ ₹95ಕ್ಕೆ ಇಳಿಕೆ ಕಂಡಿದೆ. 

ಇದರಿಂದಾಗಿ ಕೈಗೆಟಕುವ ದರದಲ್ಲಿ ಗ್ರಾಹಕರು ತೊಗರಿ ಬೇಳೆ ಖರೀದಿಸಲು ಸಾಧ್ಯವಾಗುತ್ತಿದೆ. ಆದರೆ, ಕಳೆದ ವರ್ಷ ಕ್ವಿಂಟಲ್‌ಗೆ ₹12 ಸಾವಿರಕ್ಕೆ ಏರಿಕೆ ಕಂಡಿದ್ದ ತೊಗರಿ ದರ ಈ ಬಾರಿ ₹6,500ರಿಂದ ₹7 ಸಾವಿರ ಆಸುಪಾಸಿನಲ್ಲಿರುವುದರಿಂದ ರೈತರಿಗೆ ನಷ್ಟವಾಗುತ್ತಿದೆ.

ಕಳೆದ ವರ್ಷ ನೆಟೆ ರೋಗ ಬಂದಿದ್ದರಿಂದ ತೊಗರಿ ಉತ್ಪಾದನೆ ಕುಸಿದಿತ್ತು. ಈ ಬಾರಿ ಉತ್ತಮ ಇಳುವರಿ ಬಂದಿದ್ದರಿಂದ ದಾಲ್‌ ಮಿಲ್‌ನವರು ಪ್ರತಿ ಕ್ವಿಂಟಲ್‌ಗೆ ₹6,300ರಂತೆ ತೊಗರಿ ಖರೀದಿ ಮಾಡಿದ್ದಾರೆ. ಹೀಗಾಗಿ, ತೊಗರಿ ಬೇಳೆ ದರವೂ ಇಳಿಕೆಯಾಗಿದೆ.

ಕೇಂದ್ರ ಸರ್ಕಾರವು ಬರ್ಮಾ, ಘಾನಾ, ದಕ್ಷಿಣ ಆಫ್ರಿಕಾ ದೇಶಗಳಿಂದ ಈ ಬಾರಿ ತೊಗರಿಯನ್ನು ಆಮದು ಮಾಡಿಕೊಂಡಿದ್ದರಿಂದ ತೊಗರಿ ಸಂಗ್ರಹ ಯಥೇಚ್ಛವಾಗಿದೆ. ದಾಲ್‌ ಮಿಲ್‌ಗಳು ಹೆಚ್ಚಿನ ಪ್ರಮಾಣದಲ್ಲಿ ತೊಗರಿ ಬೇಳೆಯನ್ನು ಉತ್ಪಾದನೆ ಮಾಡಿವೆ ಎನ್ನುತ್ತಾರೆ ವ್ಯಾಪಾರಿಗಳು.

‘ಈ ಬಾರಿ ಕಲಬುರಗಿ, ವಿಜಯಪುರ ಜಿಲ್ಲೆ ಹಾಗೂ ಪಕ್ಕದ ಆಂಧ್ರಪ್ರದೇಶ, ತೆಲಂಗಾಣದಲ್ಲೂ ವ್ಯಾಪಕವಾಗಿ ತೊಗರಿ ಬೆಳೆದಿದ್ದಾರೆ. ಇಳುವರಿ ಉತ್ತಮವಾಗಿ ಬಂದಿದೆಯಾದರೂ ತೊಗರಿ ಗುಣಮಟ್ಟ ಕಡಿಮೆ ಇದೆ. ಹೀಗಾಗಿ, ಕ್ವಿಂಟಲ್‌ಗೆ ಸರಾಸರಿ ₹6,300ರಂತೆ ತೊಗರಿ ಖರೀದಿ ಮಾಡಿದ್ದೇವೆ. ₹9,200ರಿಂದ ₹10 ಸಾವಿರದವರೆಗೆ ಪ್ರತಿ ಕ್ವಿಂಟಲ್ ತೊಗರಿ ಬೇಳೆಯನ್ನು ಮಾರಾಟ ಮಾಡುತ್ತಿದ್ದೇವೆ’ ಎಂದು ಗುಲಬರ್ಗಾ ದಾಲ್‌ ಮಿಲ್‌ ಅಸೋಸಿಯೇಷನ್ ಅಧ್ಯಕ್ಷ ಚಂದ್ರಶೇಖರ ಕೋಬಾಳ ಮಾಹಿತಿ ನೀಡಿದರು. 

‘ಮೂರ್ನಾಲ್ಕು ತಿಂಗಳ ಹಿಂದೆ ಪ್ರತಿ ಕೆ.ಜಿಗೆ ₹120 ಇದ್ದ ತೊಗರಿ ಬೇಳೆ ದರವು ಈಗ ₹95ರಿಂದ ₹100ರಂತೆ ಮಾರಾಟವಾಗುತ್ತಿದೆ. ಒಂದು ತಿಂಗಳ ಬಳಿಕ ಮತ್ತೆ ಕೊಂಚ ದರ ಏರಿಕೆಯಾಗಬಹುದು’ ಎನ್ನುತ್ತಾರೆ ಕಲಬುರಗಿಯ ಗಂಜ್ ಪ್ರದೇಶದ ಕಿರಾಣಿ ವ್ಯಾಪಾರಿ ರವಿಶಂಕರ ಜಮಾದಾರಖಾನಿ.

2024ರ ಜುಲೈನಲ್ಲಿ ಪ್ರತಿ ಕೆ.ಜಿ ತೊಗರಿ ಬೇಳೆ ದರವು ₹180ಕ್ಕೆ ತಲುಪಿತ್ತು.

]]>
Sat, 21 Jun 2025 07:05:19 +0530 shivuagrico
Gram panchayat&ನಿಮ್ಮಗ್ರಾಮ ಪಂಚಾಯತಿಯಲ್ಲಿ ನಿಮ್ಮ ಕೆಲಸ ಆಗದಿದ್ದರೆ ಹೀಗೆ ಮಾಡಿ https://krushirushi.in/Gram-Panchayat-2178 https://krushirushi.in/Gram-Panchayat-2178 Gram panchayat-ನಿಮ್ಮಗ್ರಾಮ ಪಂಚಾಯತಿಯಲ್ಲಿ ಸಿಗುವ ಸೇವೆಗಳು ಹಾಗೂ ನಿಮ್ಮ ಕೆಲಸ ಮಾಡಲು ನಿಗಧಿಪಡಿಸಿದ ಕಾಲಮಿತಿ 


Panchamitra what’s app service-ಇನ್ನು ಮುಂದೆ ನಿಮ್ಮ ವಾಟ್ಸಪ್ ನಲ್ಲೆ ಸಿಗಲಿವೆ ಗ್ರಾಮ ಪಂಚಾಯತಿಯ ಎಲ್ಲಾ ಸೇವೆಗಳು, ವಾಟ್ಸಪ್ ನಲ್ಲಿ ಹೀಗೆ ಮೇಸೆಜ್ ಮಾಡಿ

ಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಅದೇನು ಅಂದ್ರೇ ಜಸ್ಟ್ ಈ ನಂಬರ್ ಗೆ ವಾಟ್ಸಾಪ್ (WhatsApp) ಮಾಡಿ ಸಾಕು.

ಅದು ಹೇಗೆ ಅಂತ ಮುಂದೆ ಓದಿ.

ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಗ್ರಾಮ ಪಂಚಾಯ್ತಿ ಸೇವೆಗಳು ಕುಳಿತಲ್ಲೇ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭಿಸಲಾಗಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಪಡೆಯಬಹುದಾಗಿದೆ.

ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ.

ಕುಂದು-ಕೊರತೆಗಳನ್ನು ಹಾಗೂ ಸಮಸ್ಯೆಗಳನ್ನು ದಾಖಲಿಸಲು ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಪಂಚಮಿತ್ರ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಗ್ರಾಮೀಣ ಜನತೆ ತಮ್ಮೆಲ್ಲಾ ಅಹವಾಲುಗಳನ್ನು ದಾಖಲಿಸಲು ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಬಹುದು. ಅಥವಾ ಅದೇ ಸಂಖ್ಯೆಯಲ್ಲಿ ವಾಟ್ಸಾಪ್ ಚಾಟ್ ಮೂಲಕವೂ ಅಹವಾಲು ಸಲ್ಲಿಸಬಹುದು.

 ಸಾರ್ವಜನಿಕರು ತಮಗೆ ಅವಶ್ಯಕತೆ ಇರುವ ಗ್ರಾ.ಪಂ.ಗಳಲ್ಲಿ ಲಭ್ಯ ಸೇವೆಗಳಿಗೆ ಅರ್ಜಿ ಸಲ್ಲಿಸಲು, ವಿವಿಧ ಮಾಹಿತಿ, ವಿವರಗಳನ್ನು ಪಡೆಯಲು ಹಲವಾರು ವೆಬ್​ಸೈಟ್‌ ಮತ್ತು ಪೋರ್ಟಲ್​ಗಳಿಗೆ ಭೇಟಿ ನೀಡಬೇಕಾಗಿತ್ತು. ಅಲ್ಲದೇ, ಗ್ರಾ.ಪಂ.ಗಳಿಗೆ ಸಂಬಂಧಿಸಿದ ಎಲ್ಲಾ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಲು ಯಾವುದೇ ನಿರ್ದಿಷ್ಟವಾದ ವೆಬ್​ಸೈಟ್‌ ಅಥವಾ ಪೋರ್ಟಲ್​ಗಳು ಇರಲಿಲ್ಲ. ಈ ಹಿನ್ನೆಲೆಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ಪಂಚಮಿತ್ರ ಎಂಬ ವಿನೂನತ ವಾಟ್ಸ್‌ಆ್ಯಪ್‌ ಚಾಟ್‌ ಅನ್ನು ಅನುಷ್ಠಾನಕ್ಕೆ ತರಲಾಗಿದೆ. ಪಂಚಮಿತ್ರದ ವಾಟ್ಸ್‌ಆ್ಯಪ್‌ ನಂ. 8277506000 ಮೂಲಕವೇ ಇನ್ನು ಮುಂದೆ ಸಾರ್ವಜನಿಕರು ಗ್ರಾ.ಪಂ.ಗಳಗಳಲ್ಲಿ ಲಭ್ಯವಿರುವ ಕಟ್ಟಡ ನಿರ್ಮಾಣ ಲೈಸೆನ್ಸ್, ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜಿನ ಸಂಪರ್ಕ ಕಡಿತ, ವ್ಯಾಪಾರ ಪರವಾನಗಿ ಸೇರಿದಂತೆ ಇತರೆ ಎಲ್ಲ ಸೇವೆಗಳಿಗೆ ಅರ್ಜಿ ಸಲ್ಲಿಸಬಹುದು. ಬಳಿಕ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಅದೇ ರೀತಿ ತಮ್ಮ ಗ್ರಾಂ.ಪಂ. ವ್ಯಾಪ್ತಿಯ ಬೀದಿ ದೀಪ ನಿರ್ವಹಣೆ, ಕುಡಿಯುವ ನೀರು, ರಸ್ತೆ-ಸೇತುವೆ ದುರಸ್ತಿ, ತ್ಯಾಜ್ಯ ನಿರ್ವಹಣೆ ಸಮಸ್ಯೆ, ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆಗೆ ಮತ್ತು ಪಂಚಾಯತ್‌ ರಾಜ್‌ ವಿಷಯಗಳಿಗೆ ಸಂಬಂಧಿತ 78 ವ‌ರ್ಗಗಳ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಬಹುದಾಗಿದೆ ಹಾಗೂ ಕುಂದುಕೊರತೆಯ ಸ್ಥಿತಿಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸಬಹುದಾಗಿದೆ.

ಅಲ್ಲದೆ, ಚುನಾಯಿತ ಪ್ರತಿನಿಧಿಗಳ ವಿವರಗಳು, ಅಧಿಕಾರಿ, ಸಿಬ್ಬಂದಿ ವಿವರಗಳು, ಪೂರ್ಣಗೊಂಡ ಗ್ರಾಮ ಪಂಚಾಯಿತಿ ಸಭೆಗಳ ನಡಾವಳಿಗಳು, ಗ್ರಾಮ ಪಂಚಾಯಿತಿಗಳ ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು, ಟೆಂಡರ್‌ಗಳು, ಸೇವೆಗಳ ವಿವರಗಳು, ಸ್ವ-ಸಹಾಯ ಗುಂಪಿನ ವಿವರಗಳು, ಆರ್‌ಟಿಐ ದಾಖಲೆಗಳು ಲಭ್ಯವಾಗಲಿವೆ.

ವಾಟ್ಸಪ್ ಚಾಟ್‌ನಲ್ಲಿ  ಮಾಹಿತಿ ಪಡೆಯೋದು ಹೇಗೆ?

ನಿಮ್ಮ ಮೊಬೈಲ್‌ನಲ್ಲಿ ಇಲಾಖೆಯ ವಾಟ್ಸ್‌ಆ್ಯಪ್‌ ಚಾಟ್‌ ನಂಬರ್‌- 8277506000 ಅನ್ನು ಸೇವ್‌ ಮಾಡಿಕೊಂಡು ಚಾಟ್‌ ಆರಂಭಿಸಿ, Hi ಎಂದು ಮೇಸೆಜ್ ಮಾಡಿ

ನಂತರ ಭಾಷೆಯನ್ನು ಆಯ್ಕೆ ಮಾಡಿ

ನಂತರ ತಾನಾಗಿಯೇ ಕೆಲ ಆಯ್ಕೆಗಳು ಆರಂಭವಾಗುತ್ತಾ ಸಾಗುತ್ತದೆ. ಕ್ರಮ ಸಂಖ್ಯೆಗಳನ್ನು ನಮೂದಿಸುವ ಮೂಲಕ ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮ ಆಯ್ಕೆ ಮಾಡಿಕೊಳ್ಳಿ

 ನೀವು ಬಯಸುವ ಗ್ರಾ.ಪಂಚಾಯಿತಿ ಆಯ್ಕೆ ಮಾಡಿಕೊಂಡು ಅಲ್ಲಿನ ಚುನಾಯಿತಿ ಪ್ರತಿನಿಧಿಗಳು, ಸಿಬ್ಬಂದಿಯ ಮಾಹಿತಿ ಪಡೆಯಬಹುದು.

ಅದೇ ರೀತಿ ಸ್ವಾಧೀನ ಪ್ರಮಾಣಪತ್ರ, ರಸ್ತೆ, ಅಗೆವುದಾಕ್ಕಾಗಿ ಅನುಮತಿ, ಕೈಗಾರಿಕಾ/ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ, ನಿರಾಕ್ಷೇಪಣಾ ಪತ್ರ, ನರೇಗಾ ಅಡಿಯಲ್ಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ, ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು, ಹೊಸ/ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ/ನಿಯಮಿತಗೊಳಿವಿಕರ, ಹೊಸ/ಅಸ್ತಿತ್ವದಲ್ಲಿರುವ ಓವರ್‌ಗೌಂಡ್ ಕೇಬಲ್ ಮೂಲಸೌಕರ್ಯ/ಭೂಗತ ಕೇಬಲ್ ಮೂಲಸೌಕರ್ಯಗಳ ಅನುಮತಿ/ನಿಯಮಿತಗೊಳಿಸುವಿಕೆ, ನಮೂನೆ 9/11ಎ, ನಮೂನೆ 11 ಬಿ ಸೇರಿ ಎಲ್ಲ ಸೇವೆಗಳಿಗೆ ಅರ್ಜಿ ಸಲ್ಲಿಸಬಹುದು. ಕುಂದುಕೊರತೆಗಳನ್ನು ದಾಖಲಿಸಬಹುದು.

ಈ ಮೇಲಿನ ನಾಡಕಛೇರಿ ಸೇವೆಗಳನ್ನು ಪಡೆಯಲು, (https://nadakacheri.karnataka.gov.in/Online_service/loginpage.aspx ) ವೆಬ್‌ ಸೈಟ್‌ ಗೆ ಭೇಟಿ ನೀಡಿ 

ಪಂಚಮಿತ್ರ ವೆಬ್ಸೈಟ್ ಲಿಂಕ್ https://panchatantra.kar.nic.in/panchamitra/

]]>
Fri, 20 Jun 2025 12:46:59 +0530 shivuagrico
Gruhalakshmi list&ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ,ಫಲಾನುಭವಿ ಪಟ್ಟಿಯಲ್ಲಿ ಯಾವುದೇ ಬದಲಾವಣೆಯಿಲ್ಲ,ಈ ಪಟ್ಟಿಯಲ್ಲಿರುವ ಎಲ್ಲರಿಗೂ ಜಮಾ ಆಗಲಿದೆ ಹಣ https://krushirushi.in/Gruhalakshmi-list-2177 https://krushirushi.in/Gruhalakshmi-list-2177 Gruhalakshmi list-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ,ಫಲಾನುಭವಿ ಪಟ್ಟಿಯಲ್ಲಿ ಯಾವುದೇ ಬದಲಾವಣೆಯಿಲ್ಲ


ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಹಲವರ ಹೆಸರು ಕೈಬಿಡಲಾಗುತ್ತಿದೆ ಎಂದು ವದಂತಿ ಹರಿದಾಡುತ್ತಿತ್ತು. ಈ ಬಗ್ಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಆಗುತ್ತಿದೆಯೇ ಎಂಬ ಪ್ರಶ್ನೆಗೆ, ಆತಂಹ ಸಮಸ್ಯೆ ಏನೂ ಇಲ್ಲ ಎಂದರು.

ಈ‌ಗಾಗಲೇ ಏಪ್ರಿಲ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ನಮಗೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ನಮ್ಮ ಇಲಾಖೆಯ ಬದಲಾಗಿ ಈಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮೂಲಕ ಹಣ ಸಂದಾಯವಾಗುತ್ತಿದೆ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆಗೆ ಯಾವುದೇ ತೊಂದರೆ ಇಲ್ಲ

ಗೃಹಲಕ್ಷ್ಮಿ ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಳಜಿ ಇದೆ‌. ಯೋಜನೆಗೆ ಯಾವುದೇ ತೊಂದರೆ ಇಲ್ಲ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ ಎಂದು ಉತ್ತರಿಸಿದರು.

ಪ್ರತಿ ತಿಂಗಳು ಫಲಾನುಭವಿಗಳ ಸಂಖ್ಯೆ ಹೆಚ್ಚಳ

ಪ್ರತಿ ತಿಂಗಳು 10 ರಿಂದ 15 ಸಾವಿರ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿದೆ. ನೋಂದಣಿ ಮಾಡಿಕೊಂಡ ಎಲ್ಲಾ ಫಲಾನುಭವಿಗಳಿಗೆ ಹಣ ತಲುಪುತ್ತಿದೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

Hi

]]>
Fri, 20 Jun 2025 08:54:08 +0530 shivuagrico
Mobile canteen subsidy&ಮೊಬೈಲ್‌ ಕ್ಯಾಂಟೀನ್‌ ತೆರೆಯಲು ಸಿಗಲಿದೆ 5 ಲಕ್ಷ ರೂ.ಗಳ ಸಹಾಯಧನ: ಯಾರೆಲ್ಲಾ ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ? https://krushirushi.in/Mobile-canteen-subsidy-2176 https://krushirushi.in/Mobile-canteen-subsidy-2176 Mobile canteen subsidy-ಮೊಬೈಲ್‌ ಕ್ಯಾಂಟೀನ್‌ ತೆರೆಯಲು ಸಿಗಲಿದೆ 5 ಲಕ್ಷ ರೂ.ಗಳ ಸಹಾಯಧನ: ಯಾರೆಲ್ಲಾ ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ?


ಏನಿದು ಮೊಬೈಲ್‌ ಕ್ಯಾಂಟೀನ್‌ ಸಬ್ಸಿಡಿ ಯೋಜನೆ?
ಕರ್ನಾಟಕ ಸರ್ಕಾರವು ನಿರುದ್ಯೋಗಿ ಯುವಕರಿಗೆ ತಮ್ಮದೇ ಆದ ವ್ಯವಹಾರವನ್ನು ಪ್ರಾರಂಭಿಸಲು ಸಹಾಯ ಮಾಡಲು ಮೊಬೈಲ್ ಕ್ಯಾಂಟೀನ್ ಸಬ್ಸಿಡಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯು ವ್ಯಕ್ತಿಗಳಿಗೆ ಸಂಚಾರಿ ಕ್ಯಾಂಟೀನ್‌ ವಾಹನಗಳನ್ನು ಖರೀದಿಸಲು ಮತ್ತು ನಿರ್ವಹಿಸಲು ಸಹಾಯಧನವನ್ನು ಒದಗಿಸುತ್ತದೆ. ಅರ್ಹ ಫಲಾನುಭವಿಗಳಿಗೆ 5 ಲಕ್ಷ ರೂ.ವರೆಗೆ ಸಹಾಯಧನ ಪಡೆಯಬಹುದಾಗಿದೆ. ಇದು ವಾಹನದ ವೆಚ್ಚದ ಗಮನಾರ್ಹ ಭಾಗವನ್ನು ಒಳಗೊಂಡಿರುತ್ತದೆ ಮತ್ತು ಇದು ರಾಜ್ಯದ ಪ್ರವಾಸೋದ್ಯಮ ಇಲಾಖೆಯ ಉಪಕ್ರಮಗಳ ಭಾಗವಾಗಿದೆ.



ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ/ಕೌಶಲ್ಯ ತರಬೇತಿ ಹಾಗೂ ತರಬೇತಿ ಪಡೆದ ಬಳಿಕ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ಉದ್ದಿಮೆಯನ್ನು ಆರಂಭಿಸಲು ಸಬ್ಸಿಡಿಯನ್ನು ಪಡೆಯಲು ಈ ಯೋಜನೆಯಡಿ ಅವಕಾಶವಿರುತ್ತದೆ. ಅದೇ ರೀತಿ ಅತಿಥ್ಯ ಕ್ಷೇತ್ರದಲ್ಲಿ ಸಣ್ಣ ಉದ್ಯಮಿದಾರರಾಗಲು ಅಭ್ಯರ್ಥಿಗಳಿಗೆ ಊಟ, ವಸತಿ ಹಾಗೂ ಪ್ರೋತ್ಸಾಹಧನ ಜೊತೆಗೆ ಕೆಎಸ್‌ಟಿಡಿಸಿ ಸಂಸ್ಥೆಯ ಮೂಲಕ ಒಂದು ತಿಂಗಳು ತರಬೇತಿ ನೀಡಲಾಗುವುದು.

ಯೋಜನೆಯ ಪ್ರಮುಖ ಅಂಶಗಳು

  1. ಉದ್ದೇಶಿತ ಫಲಾನುಭವಿಗಳು: ಈ ಯೋಜನೆಯು ಪ್ರಾಥಮಿಕವಾಗಿ ನಿರುದ್ಯೋಗಿ ಯುವಕರನ್ನು ಗುರಿಯಾಗಿಸಿಕೊಂಡಿದ್ದು, ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಯೋಜನೆ ಅನ್ವಯವಾಗಲಿದೆ.
  2. ಸಬ್ಸಿಡಿ ಮೊತ್ತ: ಅರ್ಹ ವ್ಯಕ್ತಿಗಳು ಮೊಬೈಲ್ ಕ್ಯಾಂಟೀನ್ ಸ್ಥಾಪಿಸಲು 5 ಲಕ್ಷ ರೂ.ವರೆಗೆ ಸಬ್ಸಿಡಿ ಪಡೆಯಬಹುದು.
  3. ಪ್ರವಾಸೋದ್ಯಮ ನೀತಿ: ಸಬ್ಸಿಡಿಯನ್ನು ಪ್ರವಾಸೋದ್ಯಮ ಸಂಬಂಧಿತ ವ್ಯವಹಾರಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಕರ್ನಾಟಕ ಪ್ರವಾಸೋದ್ಯಮ ನೀತಿ 2020-25ಕ್ಕೆ ಲಿಂಕ್ ಮಾಡಲಾಗಿದೆ.
  4. ತರಬೇತಿ: ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ಉದ್ದಿಮೆ ಆರಂಭಿಸಲು ಒಂದು ತಿಂಗಳ ಉದ್ಯಮಶೀಲತೆ/ಕೌಶಲ್ಯ ತರಬೇತಿ ಹಾಗೂ ತರಬೇತಿ ನೀಡಲಾಗುತ್ತದೆ.

ಮೊಬೈಲ್‌ ಕ್ಯಾಂಟೀನ್‌ ಯೋಜನೆಯ ಉದ್ದೇಶ ಏನು?ರಾಜ್ಯದಲ್ಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಯುವಕರಿಗೆ ಆರ್ಥಿಕ ಸಬಲೀಕರಣವನ್ನು ನೀಡುವುದು ಮತ್ತು ಸ್ವ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವುದು ಈ ಯೋಜನೆಯ ಪ್ರಧಾನ ಉದ್ದೇಶ.

ಯೋಜನೆಯಡಿ ದೊರೆಯುವ ಸಹಾಯಧನ ಎಷ್ಟು?ಅರ್ಜಿ ಸಲ್ಲಿಸಿದ ಬಳಿಕ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟಿನ್ ಅನ್ನು ಆರಂಭಿಸಲು ಒಟ್ಟು ಘಟಕ ವೆಚ್ಚಕ್ಕೆ ಶೇ 70 ರಷ್ಟು ಗರಿಷ್ಠ 5 ಲಕ್ಷದ ವರೆಗೆ ಸಹಾಯಧನವನ್ನು ಒದಗಿಸಲಾಗುತ್ತದೆ.

ಅರ್ಹತಾ ಮಾನದಂಡಗಳೇನು?ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನ ನಿಬಂಧನೆಗಳನ್ನು ಪೂರೈಸಬೇಕು

  • ರಾಜ್ಯದ ಮೂಲ ನಿವಾಸಿ ಆಗಿರಬೇಕು.
  • ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕೆ ಸೇರಿದವರಾಗಿರಬೇಕು.
  • ಕನಿಷ್ಠ SSLC ಉತ್ತೀರ್ಣ ಆಗಿರಬೇಕು.
  • ವಯಸ್ಸು 20ರಿಂದ 45 ವರ್ಷದೊಳಗೆ ಇರಬೇಕು.
  • ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
  • ನಗರ ನಿವಾಸಿಗಳಿಗೆ ವಾರ್ಷಿಕ ಆದಾಯ 2 ಲಕ್ಷ ರೂ.ಕ್ಕಿಂತ ಕಡಿಮೆ ಇರಬೇಕು.
  • ಗ್ರಾಮಾಂತರ ನಿವಾಸಿಗಳಿಗೆ ಆದಾಯ ಮಿತಿ 1.5 ಲಕ್ಷ ರೂ. ನಿಗದಿಪಡಿಸಲಾಗಿದೆ
  • ಅರ್ಜಿದಾರ ಅಥವಾ ಕುಟುಂಬದ ಸದಸ್ಯರು ಸರ್ಕಾರಿ ನೌಕರರಾಗಿರಬಾರದು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು?

  • ಅರ್ಜಿ ನಮೂನೆ (ಸ್ಥಳೀಯ ಪ್ರವಾಸೋದ್ಯಮ ಇಲಾಖೆಯಲ್ಲಿ ಲಭ್ಯ)
  • ಆಧಾರ್ ಕಾರ್ಡ್ ಪ್ರತಿ
  • ಪಾಸ್‌ಪೋರ್ಟ್ ಗಾತ್ರದ 2 ಭಾವಚಿತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • SSLC ಅಂಕಪಟ್ಟಿ
  • ಲಘು ವಾಹನ ಚಾಲನಾ ಪರವಾನಗಿ
  • ಅಫಿಡೆವಿಟ್ (ರೂ.50 ಛಾಪಾ ಕಾಗದದಲ್ಲಿ, ನೌಕರರಲ್ಲ ಎಂಬ ಪ್ರಮಾಣ ಪತ್ರ)

ಇದನ್ನೂ ಓದಿ: ವೃತ್ತಿ ಪ್ರೋತ್ಸಾಹ ಸಾಲ ಯೋಜನೆ: ಸ್ವಂತ ವೃತ್ತಿ ಕೈಗೊಳ್ಳಲು 1 ಲಕ್ಷ ರೂ.ವರೆಗಿನ ಸಾಲಕ್ಕೆ 50% ಸಹಾಯಧನ! ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಕೆಯ ವಿಧಾನ ಹೇಗೆ?

  • ನಿಮ್ಮ ಜಿಲ್ಲೆಯಲ್ಲಿ ಇರುವ ಪ್ರವಾಸೋದ್ಯಮ ಇಲಾಖೆ ಕಚೇರಿಗೆ ಭೇಟಿ ನೀಡಿ.
  • ಮೊಬೈಲ್‌ ಕ್ಯಾಂಟೀನ್‌ ಆರಂಭಿಸಲು ಅರ್ಜಿ ನಮೂನೆ ಪಡೆದು, ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ.
  • ಅರ್ಜಿ ಪರಿಶೀಲನೆಯ ನಂತರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಉದ್ಯಮಶೀಲತೆ ತರಬೇತಿ ನೀಡಲಾಗುತ್ತದೆ.
  • ತರಬೇತಿ ಯಶಸ್ವಿಯಾಗಿ ಪೂರ್ಣಗೊಳಿಸಿದ ಬಳಿಕ, ಸಬ್ಸಿಡಿ ಅನುದಾನವನ್ನು ಬಿಡುಗಡೆ ಮಾಡಲಾಗುತ್ತದೆ.

ಗಮನಿಸಿ: ಈ ಯೋಜನೆ ಅನುದಾನ ಲಭ್ಯತೆಯ ಆಧಾರದ ಮೇಲೆ ರಾಜ್ಯದ ಕೆಲವು ಆಯ್ದ ಜಿಲ್ಲೆಗಳಿಗೆ ಮಾತ್ರ ಅನ್ವಯಿಸುತ್ತದೆ. ಅರ್ಜಿದಾರರು ತಮ್ಮ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಕಚೇರಿಯನ್ನು ಭೇಟಿಯಾಗಿ ಯೋಜನೆಯ ಲಭ್ಯತೆ, ಅರ್ಜಿ ಸ್ವೀಕಾರ ದಿನಾಂಕ, ತರಬೇತಿ ಕೇಂದ್ರಗಳ ವಿವರಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು.

ಸಂಪರ್ಕ ಮಾಹಿತಿ:ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿ, ರಂಗಾಯಣ ಆವರಣ, ಬೆಂಗಳೂರು. ದೂರವಾಣಿ ಸಂಖ್ಯೆ: 0836-295552


ಪ್ರಶ್ನೋತ್ತರಗಳು

  1. ಯಾರು ಈ ಮೊಬೈಲ್ ಕ್ಯಾಂಟಿನ್ ಯೋಜನೆಗೆ ಅರ್ಜಿ ಸಲ್ಲಿಸಬಹುದು?
    ಈ ಯೋಜನೆಗೆ ಅರ್ಜಿ ಸಲ್ಲಿಸಬಲ್ಲವರು ಕರ್ನಾಟಕದ ನಿವಾಸಿಯಾಗಿದ್ದು, ಪರಿಶಿಷ್ಟ ಜಾತಿ (SC) ಅಥವಾ ಪರಿಶಿಷ್ಟ ಪಂಗಡ (ST) ಸಮುದಾಯಕ್ಕೆ ಸೇರಿದವರು ಆಗಿರಬೇಕು. ವಯಸ್ಸು 20ರಿಂದ 45ರೊಳಗಿನವರಾಗಿದ್ದು, ಕನಿಷ್ಠ SSLC ಉತ್ತೀರ್ಣರಾಗಿರಬೇಕು ಮತ್ತು ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
  2. ಮೊಬೈಲ್ ಕ್ಯಾಂಟಿನ್ ಸ್ಥಾಪನೆಗಾಗಿ ಎಷ್ಟು ಸಹಾಯಧನ ಸಿಗುತ್ತದೆ?
    ಘಟಕ ವೆಚ್ಚದ ಶೇ.70ರಷ್ಟು, ಗರಿಷ್ಠ ₹5 ಲಕ್ಷವರೆಗೆ ಸಹಾಯಧನ ಸಿಗುತ್ತದೆ. ಇದು ವಾಹನ ಖರೀದಿ ಮತ್ತು ಉದ್ದಿಮೆ ಆರಂಭದ ಇತರೆ ವೆಚ್ಚಗಳಿಗೆ ಬಳಸಬಹುದಾದದು.
  3. ಈ ಯೋಜನೆಯಡಿಯಲ್ಲಿ ತರಬೇತಿ ನೀಡಲಾಗುತ್ತದೆಯೆ?
    ಹೌದು, ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಒಂದು ತಿಂಗಳ ಉದ್ಯಮಶೀಲತೆ ಮತ್ತು ಕೌಶಲ್ಯ ತರಬೇತಿ ನೀಡಲಾಗುತ್ತದೆ. ತರಬೇತಿಯಲ್ಲಿ ಊಟ, ವಸತಿ ಹಾಗೂ ಪ್ರೋತ್ಸಾಹ ಧನವನ್ನು ಕೂಡ ಒದಗಿಸಲಾಗುತ್ತದೆ.
  4. ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಅಗತ್ಯವಿವೆ?
    ಅಧಿಕೃತ ಅರ್ಜಿ ನಮೂನೆ, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಗಾತ್ರದ 2 ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, SSLC ಪ್ರಮಾಣ ಪತ್ರ, ಲಘು ವಾಹನ ಚಾಲನಾ ಪರವಾನಗಿ, ಹಾಗೂ ನೌಕರರಲ್ಲ ಎಂಬ ಅಫಿಡೆವಿಟ್ (₹50 ಛಾಪಾ ಕಾಗದದಲ್ಲಿ) ಅಗತ್ಯವಿದೆ.
  5. ಅರ್ಜಿ ಎಲ್ಲಿಗೆ ಮತ್ತು ಹೇಗೆ ಸಲ್ಲಿಸಬೇಕು?
    ನಿಮ್ಮ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆ ಪಡೆದು, ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಅರ್ಜಿ ಪರಿಶೀಲನೆಯ ಬಳಿಕ ಆಯ್ಕೆಯಾದವರಿಗೆ ತರಬೇತಿ ನೀಡಲಾಗುತ್ತದೆ ಮತ್ತು ನಂತರ ಸಹಾಯಧನ ಬಿಡುಗಡೆ ಮಾಡಲಾಗುತ್ತದೆ.




ಮೊಬೈಲ್‌ ಕ್ಯಾಂಟೀನ್‌ ಸಬ್ಸಿಡಿ ಯೋಜನೆಯ ಗುಣಲಕ್ಷಣಗಳು

ಗುಣಲಕ್ಷಣಗಳು ವಿವರಗಳು
ಯೋಜನೆಯ ಹೆಸರು ಮೊಬೈಲ್ ಕ್ಯಾಂಟಿನ್ ಸಬ್ಸಿಡಿ ಯೋಜನೆ
ಇಲಾಖೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ
ಉದ್ದೇಶ ನಿರುದ್ಯೋಗಿ ಯುವಕರಿಗೆ ಸ್ವ ಉದ್ಯೋಗ ಅವಕಾಶ ಕಲ್ಪಿಸಿ ಆರ್ಥಿಕ ಸ್ವಾವಲಂಬಿಗಳನ್ನಾಗಿಸುವುದು
ಅರ್ಹ ಫಲಾನುಭವಿಗಳು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಸಮುದಾಯದ 20-45 ವರ್ಷದವರು
ಸಹಾಯಧನ ಪ್ರಮಾಣ ಗರಿಷ್ಠ 5 ಲಕ್ಷ ರೂ. (ಘಟಕ ವೆಚ್ಚದ 70% ವರೆಗೆ)
ಅರ್ಜಿ ಸಲ್ಲಿಸುವ ವಿಧಾನ ಜಿಲ್ಲಾ ಪ್ರವಾಸೋದ್ಯಮ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆ ಪಡೆದು, ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ತರಬೇತಿ ಉಚಿತ ಉದ್ಯಮಶೀಲತೆ/ಕೌಶಲ್ಯ ತರಬೇತಿ – 1 ತಿಂಗಳು (KSRTC ಮೂಲಕ ಊಟ, ವಸತಿ, ಪ್ರೋತ್ಸಾಹಧನದೊಂದಿಗೆ)
ದೂರವಾಣಿ ಸಂಖ್ಯೆ

0836-2955522

]]>
Thu, 19 Jun 2025 14:14:56 +0530 shivuagrico
Bele parihara&ಮಳೆಯಿಂದಾದ ಬೆಳೆ ಹಾಗೂ ಮನೆ ಹಾನಿಗೆ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ,ಯಾರಿಗೆ ಎಷ್ಟು ಪರಿಹಾರ ಸಿಗಲಿದೆ? https://krushirushi.in/Bele-parihara-2175 https://krushirushi.in/Bele-parihara-2175 Bele parihara-ಮಳೆಯಿಂದಾದ ಬೆಳೆ ಹಾಗೂ ಮನೆ ಹಾನಿಗೆ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ,ಯಾರಿಗೆ ಎಷ್ಟು ಪರಿಹಾರ ಸಿಗಲಿದೆ?

ರಾಜ್ಯ ಸರ್ಕಾರದಿಂದ ನೈರುತ್ಯ ಮುಂಗಾರು ಹಂಗಾಮು, ಈಶಾನ್ಯ ಮುಂಗಾರು ಹಂಗಾಮಿನಲ್ಲಿನ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾಗುವ ಮನೆಗಳ ಪುನರ್ ನಿರ್ಮಾಣ, ದುರಸ್ಥಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿ ಆದೇಶಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ SDRF | NDRF ರಡಿ ನೀಡಬಹುದಾದ ಪರಿಹಾರಗಳ ಕುರಿತು ಭಾರತ ಸರ್ಕಾರದ ಗ್ರಹ ಮಂತ್ರಾಲಯವು ಮೇಲೆ ಓದಲಾದ (1) ರಂತೆ ಹೊರಡಿಸಿರುವ SDRF / NDRF Items and Norms of Assistance ರ ಮಾರ್ಗಸೂಚಿಗಳಲ್ಲಿ ನಿಗದಿಪಡಿಸಿರುವ ಪರಿಹಾರ ಮೊತ್ತದ ಜೊತೆಗೆ, 2024-25 ನೇ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ (01.06.2025 ರಿಂದ 30.09.2025) ಮತ್ತು ಈಶಾನ್ಯ ಮುಂಗಾರು ಹಂಗಾಮಿನಲ್ಲಿ (01.10.2025 ರಿಂದ 31.12.2025) ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪುವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಹೆಚ್ಚುವರಿ ಮೊತ್ತವನ್ನು ನಿಗದಿಪಡಿಸಿ, ಸದರಿ ಪರಿಹಾರ ಮೊತ್ತವನ್ನು ಪಾವತಿಸಲು ಜಿಲ್ಲಾಧಿಕಾರಿಗಳು ಅನುಸರಿಸಬೇಕಾಗಿರುವ ಕ್ರಮಗಳ ಮತ್ತು ಷರತ್ತುಗಳ ಕುರಿತು ಮೇಲೆ ಓದಲಾದ (2), (3) ಮತ್ತು (4) ರ ಆದೇಶಗಳಲ್ಲಿ ಸೂಚನೆಗಳನ್ನು ನೀಡಲಾಗಿರುತ್ತದೆ.

ಪುಸ್ತುತ ಭಾರತೀಯ ಹವಾಮಾನ ಇಲಾಖೆಯು ನೈಋತ್ಯ ಮುಂಗಾರು (SouthWest) ಹಂಗಾಮು-2025 ರ ಮೊದಲ ಹಂತದ ಕಾರ್ಯಚರಣೆಯ ಧೀರ್ಘ ವ್ಯಾಪ್ತಿಯ ಮುನ್ಸೂಚನೆಯ (LRF) ಪುಕಾರ ಒಟ್ಟಾರೆಯಾಗಿ ದೇಶದಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಮೇಲೆ ಓದಲಾದ (5) ರ ದಿನಾಂಕ: 15.05.2025 ರಂದು ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತದೆ. ಹಾಗಾಗಿ, ಪ್ರಸಕ್ತ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಮನೆ ಹಾನಿಗೆ ಪರಿಹಾರವನ್ನು ಪಾವತಿಸುವ ಬಗ್ಗೆ ಮಾರ್ಗಸೂಚಿಗಳನ್ನು ನೀಡುವುದು ಅವಶ್ಯಕವಾಗಿರುತ್ತದೆವಾದ್ದರಿಂದ, ಅತಿವೃಷ್ಟಿ | ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ 2024-25 ನೇ ಸಾಲಿನಲ್ಲಿ ಪಾವತಿಸಿರುವ ಪರಿಹಾರದಂತೆ 2025-26 ನೇ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ (01.06.2025 ರಿಂದ 30.09.2025) ಮತ್ತು ಈಶಾನ್ಯ ಮುಂಗಾರು ಹಂಗಾಮಿನಲ್ಲಿ (01.10.2025 ರಿಂದ 31.12.2025) ಹಾನಿಗೊಳಗಾಗುವ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ನಿಯಾಮಾನುಸಾರ ಅರ್ಹತೆಯಂತೆ ಜಿಲ್ಲಾಧಿಕಾರಿರವರ ಹಂತದಲ್ಲಿಯೇ ಅವರ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪಾವತಿಸಲು ಸರ್ಕಾರವು ನಿರ್ಧರಿಸಿ ಕೆಳಕಂಡಂತೆ ಆದೇಶಿಸಿದೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಅತಿವೃಷ್ಟಿ | ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ 2024-25 ನೇ ಸಾಲಿನಲ್ಲಿ ಪಾವತಿಸಿರುವ ಕೆಳಕಂಡ ಪರಿಹಾರದಂತೆ, 2025-26 ನೇ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ (01.06.2025 ರಿಂದ 30.09.2025) ಮತ್ತು ಈಶಾನ್ಯ ಮುಂಗಾರು ಹಂಗಾಮಿನಲ್ಲಿ (01.10.2025 ರಿಂದ 31.12.2025) ಹಾನಿಗೊಳಗಾಗುವ ಮನೆಗಳ ಪುನರ್ ನಿರ್ಮಾಣ / ದುರ ಕಾರ್ಯ ಹಾಗೂ ಪುವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ನಿಯಾಮಾನುಸಾರ ಅರ್ಹತೆಯಂತೆ ಪರಿಹಾರವನ್ನು ಮೇಲೆ ಓದಲಾದ (2), (3) ಮತ್ತು (4) ರ ಆದೇಶಗಳಲ್ಲಿ ವಿಧಿಸಿರುವ ಷರತ್ತುಗಳ ಪಾಲನೆಗೆ ಒಳಪಟ್ಟು, ಜಿಲ್ಲಾಧಿಕಾರಿರವರ ಹಂತದಲ್ಲಿಯೇ ಅವರ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪಾವತಿಸಲು ಸರ್ಕಾರದ ಮಂಜೂರಾತಿ ನೀಡಿ, ಆದೇಶಿಸಿದೆ.

ಪ್ರವಾಹದಿಂದ ಹಾನಿಗೊಳಗಾದ ಮನೆಗಳನ್ನು 02 ವರ್ಗಗಳಲ್ಲಿ (ಪೂರ್ಣ ಹಾನಿಯಾದ ಮನೆಗಳ ಮರು ನಿರ್ಮಾಣ ಮತ್ತು ಭಾಗಶ: ಹಾನಿಯಾದ ಮನೆಗಳ ದುರಸ್ತಿ) ವಿಂಗಡಿಸಿ ಪರಿಹಾರ ಪಾವತಿಸುವುದು.


ಪೂರ್ಣಹಾನಿಯಾದ ಮನೆಗಳಿಗೆ ಭಾರತ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ:11/07/2023ರಂದು ಹೊರಡಿಸಿರುವ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ / ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ವಯ ರೂ.1.20 ಲಕ್ಷಗಳ ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ ವಸತಿ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ದೇವರಾಜ್ ಅರಸು ವಸತಿ ಯೋಜನೆಯಡಿ ಮನೆ ನೀಡುವುದು. ದೇವರಾಜ್ ಅರಸು ವಸತಿ ಯೋಜನೆಯಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸಾಮಾನ್ಯ ವರ್ಗಗಳಿಗೆ ಮಂಜೂರು ಮಾಡುವ ಮನೆಗೆ ರೂ.1.20 ಲಕ್ಷ ಮತ್ತು ಎಸ್ಸಿ/ಎಸ್‌ಟಿ ವರ್ಗಗಳಿಗೆ ಮಂಜೂರು ಮಾಡುವ ಮನೆಗೆ ರೂ.1.50 ಲಕ್ಷ ಮಂಜೂರು ಮಾಡುವುದು. ಈ ಮನೆಗಳನ್ನು ಜಿಲ್ಲಾಧಿಕಾರಿಗಳು ಅನುಮೋದನೆ ಮಾಡಿ ವಿವರಗಳೊಂದಿಗೆ ಫಲಾನುಭವಿಗಳ ಪಟ್ಟಿಯನ್ನು RGRHCL ಪರಿಹಾರ ತಂತ್ರಾಂಶದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ವಿವರಗಳನ್ನು ದಾಖಲಿಸುವುದು.
ಅನಧಿಕೃತ ಜಮೀನಿನಲ್ಲಿ ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ಒಂದು ಬಾರಿ ಪರಿಹಾರವಾಗಿ ರೂ.1.00 ಲಕ್ಷಗಳನ್ನು ಪಾವತಿಸುವುದು ಮತ್ತು ಯಾವುದೇ ಮನೆಯನ್ನು ಮಂಜೂರು ಮಾಡುವಂತಿಲ್ಲ.

ಭಾರತ ಸರ್ಕಾರದ ಗ್ರಹ ಮಂತ್ರಾಲಯವು ದಿನಾಂಕ:11/07/2023ರಂದು ಹೊರಡಿಸಿರುವ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ / ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ವಯ ಭಾಗಶಃ ಹಾನಿಗೊಳಗಾದ ಮನೆಗಳ ದುರಸ್ತಿಗೆ ಕನಿಷ್ಟ ರೂ.6,500/- ಗಳಿಂದ ಗರಿಷ್ಮ ರೂ.50,000/-ಗಳನ್ನು ಈ ಕೆಳಕಂಡಂತೆ ಪಾರದರ್ಶಕ ಮಾನದಂಡಗಳನ್ವಯ ಅರ್ಹತೆಯನುಸಾರ ಪಾವತಿಸುವುದು.

Crop loss compensation-ಮಳೆಯಿಂದಾದ ಬೆಳೆಹಾನಿಗೆ ಪರಿಹಾರ ಪಡೆಯುವುದು ಹೇಗೆ?

ಈ ಬಾರಿ ಮುಂಗಾರು ಆಗಮನ ವಾಡಿಕೆಗಿಂತ ಬೇಗನೆ ಆಗಮಿಸಿದ ಕಾರಣ ಮೇ ಅಂತ್ಯದ ವೇಳೆಗೆ ಕರ್ನಾಟಕ ಸೇರಿ ಭಾರತದಾದ್ಯಂತ ಭರ್ಜರಿ ಮಳೆಯಾಗುತ್ತಿದೆ. ಆದರೆ ಜೂನ್‌ ಮೊದಲ ವಾರದಲ್ಲಿ ಕೊಂಚ ಮಳೆ ಪ್ರಮಾಣ ಕಡಿಮೆಯಾದರೂ ಸಹ ಕರ್ನಾಟಕದಲ್ಲಿ ಜೂನ್‌ 8ರಿಂದ ಮಳೆ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.


ಇನ್ನು, ಪ್ರತಿ ವರ್ಷವೂ ದೇಶದ ಹಲವು ರಾಜ್ಯಗಳಲ್ಲಿ ಮಳೆ ಮತ್ತು ಪ್ರವಾಹದಿಂದ ಮಾನ್ಸೂನ್ ಹಾನಿಯನ್ನು ಉಂಟು ಮಾಡುತ್ತದೆ. ಉತ್ತರ ಪ್ರದೇಶ, ಬಿಹಾರದಿಂದ ಈಶಾನ್ಯ ಭಾರತದ ರಾಜ್ಯಗಳವರೆಗೆ ಅನೇಕ ಪ್ರದೇಶಗಳಲ್ಲಿ ಜನರು ಮನೆ ಮತ್ತು ಕೃಷಿ ಬೆಳೆಯನ್ನೂ ಕಳೆದುಕೊಂಡಿದ್ದಾರೆ. ಆದರೆ ಅಂತಹ ವಿಪತ್ತಿನಲ್ಲಿ, ಸರ್ಕಾರವು ಮನೆ ಮತ್ತು ಬೆಳೆ ಕಳೆದುಕೊಂಡವರಿಗೆ ಆರ್ಥಿಕ ಸಹಾಯವನ್ನು ಸಹ ನೀಡುತ್ತದೆ. ನಷ್ಟವನ್ನು ಸರಿದೂಗಿಸಲು ಪರಿಹಾರವನ್ನು ಹೇಗೆ ಪಡೆಯುವುದು ಎಂದು ನೀವು ಮೊದಲು ಸರಿಯಾಗಿ ತಿಳಿದುಕೊಳ್ಳಬೇಕು.

ಆಡಳಿತವು ಹಾನಿ ಸಮೀಕ್ಷೆ ನಡೆಸುತ್ತೆ:

ಸ್ಥಳೀಯ ಆಡಳಿತವು ಮೊದಲು ನೈಸರ್ಗಿಕ ವಿಕೋಪ ಅಥವಾ ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಮೌಲ್ಯಮಾಪನ ಮಾಡುತ್ತದೆ. ಹಾನಿ ತುಂಬಾ ಹೆಚ್ಚಾದಾಗ, ರಾಜ್ಯ ಸರ್ಕಾರ ಪರಿಹಾರ ನಿಧಿ ಅಥವಾ ಪರಿಹಾರವನ್ನು ಘೋಷಿಸುತ್ತದೆ. ಇದಕ್ಕಾಗಿ, ಅಧಿಕಾರಿಗಳು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ವರದಿಯನ್ನು ಸಿದ್ಧಪಡಿಸಿ ರಾಜ್ಯ ಸರ್ಕಾರಕ್ಕೆ ಕಳುಹಿಸುತ್ತಾರೆ.

ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ?

ನಿಮ್ಮ ಮನೆ, ಅಂಗಡಿ ಅಥವಾ ಜಮೀನು, ಬೆಳೆ, ಕೃಷಿ ಭೂಮಿ ಹೀಗೆ ಪ್ರವಾಹ ಅಥವಾ ಮಳೆಯಿಂದ ಯಾವುದೇ ಹಾನಿಗೊಳಗಾಗಿದ್ದರೂ ಸಹ ಮೊದಲು ನೀವು ಸ್ಥಳೀಯ ಆಡಳಿತಕ್ಕೆ ತಿಳಿಸಬೇಕು.

 ಇದು ಅತ್ಯಂತ ಮುಖ್ಯವಾದ ಹಾಗೂ ನೆನಪಿನಲ್ಲಿಟ್ಟುಕೊಳ್ಳಬೇಕಾದ ಸಂಗತಿಯಾಗಿದೆ.

ಇಲ್ಲಿದೆ ಹಂತ ಹಂತದ ವಿವರ* ಇದಕ್ಕಾಗಿ, ಗ್ರಾಮ ಪಂಚಾಯತ್, ಪುರಸಭೆ ಅಥವಾ ಬ್ಲಾಕ್ ಮಟ್ಟದಲ್ಲಿ ಲಿಖಿತ ಮಾಹಿತಿಯನ್ನು ನೀಡಬಹುದು.* ಆಡಳಿತ ಅಧಿಕಾರಿಗಳು ಹಾನಿಯನ್ನು ಪರಿಶೀಲಿಸುತ್ತಾರೆ ಮತ್ತು ವರದಿಯನ್ನು ಸಿದ್ಧಪಡಿಸುತ್ತಾರೆ.* ವರದಿಯೊಂದಿಗೆ ಬಾಧಿತ ಸ್ಥಳಗಳ ಫೋಟೋಗಳು ಮತ್ತು ವೀಡಿಯೊಗಳನ್ನು ಸಹ ಕಳುಹಿಸಲಾಗುತ್ತದೆ.* ಈ ವರದಿಯು ಜಿಲ್ಲಾಡಳಿತದಿಂದ ರಾಜ್ಯ ಸರ್ಕಾರಕ್ಕೆ ಹೋಗುತ್ತದೆ.* ಇದಾದ ನಂತರ ರಾಜ್ಯ ಸರ್ಕಾರ ಪರಿಹಾರ ಮೊತ್ತವನ್ನು ಘೋಷಿಸುತ್ತದೆ ಮತ್ತು ಪರಿಹಾರವನ್ನು ವಿತರಿಸಲಾಗುತ್ತದೆ.

ಮುಖ್ಯವಾಗಿ ನೆನಪಿನಲ್ಲಿಟ್ಟುಕೊಳ್ಳಬೇಕಾದ ವಿಷಯಗಳು:

> ಪರಿಹಾರಕ್ಕಾಗಿ ಸಾಧ್ಯವಾದಷ್ಟು ಬೇಗ ಮಾಹಿತಿ ನೀಡುವುದು ಇಲ್ಲಿ ಮುಖ್ಯವಾಗುತ್ತದೆ.> ನಷ್ಟಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುರಕ್ಷಿತವಾಗಿಡುವುದು ಮುಖ್ಯ.> ನಿಮ್ಮ ವರದಿಯನ್ನು ಸರಿಯಾಗಿ ಸಲ್ಲಿಸಲು ಸ್ಥಳೀಯ ಅಧಿಕಾರಿಗಳೊಂದಿಗೆ ಸಹಕರಿಸಬೇಕು.> ಇದಾದ ಬಳಿಕ ಪರಿಹಾರವನ್ನು ಸರ್ಕಾರ ಘೋಷಿಸಿದ ಬಳಿಕ ಅಧಿಕಾರಿಗಳ ಬಳಿಕ ಹೋಗಿ ಅಗತ್ಯ ದಾಖಲೆಗಳನ್ನು ನೀಡಿ ಪಡೆಯಬೇಕು.

Crop insurance news-ಮಳೆಯಿಂದ ಬೆಳೆ ಹಾನಿಯಾಗಿ 72 ಗಂಟೆಯೊಳಗೆ ಈ ಕೆಲಸ ಮಾಡಿದವರಿಗೆ ಮಾತ್ರ ಜಮಾ ಆಗಲಿದೆ ಬೆಳೆವಿಮೆ
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಉದ್ದೇಶಬೆಳೆ ವೈಫಲ್ಯದ ಆರ್ಥಿಕ ನಷ್ಟವನ್ನು ಕಡಿಮೆ ಮಾಡುವ ಮೂಲಕ, ಇದು ರೈತರ ಆದಾಯವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ. ಮತ್ತು ರೈತರು ಸ್ಥಿರವಾದ ಆದಾಯವನ್ನು ಹೊಂದಿರುವಾಗ, ಅವರು ಉತ್ತಮ ಕೃಷಿ ಪದ್ಧತಿಗಳಲ್ಲಿ ಹೂಡಿಕೆ ಮಾಡಬಹುದು, ಇದು ಹಲವಾರು ಪ್ರಯೋಜನಗಳನ್ನು ತರುತ್ತದೆ. ಬೆಳೆ ಹಾನಿ/ನಷ್ಟದ ವಿರುದ್ಧ ರೈತರಿಗೆ ಆರ್ಥಿಕ ನೆರವು ನೀಡುವುದು.
ಸ್ಧಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ (Localized calamity) ಆಲೀಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ(ಇನಂಡೇಷನ್), ಮೇಘಸ್ಪೋಟ (Cloud burst) ಮತ್ತು ಗುಡುಗು ಮಿಂಚುಗಳಿಂದಾಗಿ ಉಂಟಾಗುವ ಬೆಂಕಿ ಅವಘಡ (Natural fire due to lightning) ಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯುಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಯೋಜನೆಯಡಿ ಅವಕಾಶವಿರುತ್ತದೆ.
ಒಂದು ವೇಳೆ ಒಂದು ಅಧಿಸೂಚಿತ ಘಟಕದಲ್ಲಿ ಶೇಕಡಾ 25 ಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ಬೆಳೆ ನಷ್ಟವಾದರೆ ಅಧಿಸೂಚಿತ ಘಟಕದಲ್ಲಿ ಬೆಳೆ ವಿಮೆಗೆ ಒಳಪಟ್ಟ ರೈತರಲ್ಲಿಬೆಳೆ ನಷ್ಟವಾದ ರೈತರಿಗೆ ಮಾತ್ರ ಮಾದರಿ ಸಮೀಕ್ಷೆಗನುಗುಣವಾಗಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು.
ಇಂತಹ ಸ್ಧಳೀಯ ಗಂಡಾಂತರಗಳ ಕಾರಣದಿಂದ ಬೆಳೆ ನಷ್ಟಸಂಭವಿಸಿದರೆ, ಬೆಳೆ ವಿಮೆ ಮಾಡಿಸಿರುವ ರೈತರು ಬಗ್ಗೆನೇರವಾಗಿ ಸಂಬಂಧಪಟ್ಟ ಅನುಷ್ಠಾನಗೊಳಿಸುವ ವಿಮಾಸಂಸ್ಥೆಗಳ ಕಛೇರಿಗಳಿಗೆ ಅಥವಾ ಹಣಕಾಸು ಸಂಸ್ಧೆ ಅಥವಾ ಕೃಷಿ/ತೋಟಗಾರಿಕೆ ಇಲಾಖೆ ಮೂಲಕ ತಕ್ಷಣಸೂಚನೆ ನೀಡಬೇಕು.
ಇಂತಹ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆಕಾರಣಗಳನ್ನು 72 ಗಂಟೆಗಳೊಳಗಾಗಿ ತಿಳಿಸಬೇಕು.
ನಷ್ಟದ ಬಗೆಗಿನ ಮಾಹಿತಿಯನ್ನು ಸ್ವೀಕರಿಸಿದ ಮೇಲೆ ವಿಮಾಸಂಸ್ಥೆಗಳು ಬೆಳೆ ನಷ್ಟವನ್ನು ನಿರ್ಧರಿಸುವುದಕ್ಕೆ ನಷ್ಟನಿರ್ಧಾರಕರನ್ನು ಸಂಬಂಧಪಟ್ಟ ಪ್ರದೇಶಕ್ಕೆ 48 ಗಂಟೆಯೊಳಗಾಗಿ ನಿಯೋಜಿಸುವುದು.
ವಿಮೆ ಸಂಸ್ಥೆಯಿಂದ ನೇಮಿಸಲ್ಪಟ್ಟ ನಷ್ಟ ನಿರ್ಧಾರಕರುಮತ್ತು ಸ್ಥಳೀಯ ತಾಲ್ಲೂಕು/ಹೋಬಳಿ ಮಟ್ಟದ ಕೃಷಿ ಮತ್ತುತೋಟಗಾರಿಕಾ ಇಲಾಖಾ ಅಧಿಕಾರಿಗಳು ಜಂಟಿಯಾಗಿ, ಹಾನಿಗೊಳಗಾದ ರೈತರ ಸಮ್ಮುಖದಲ್ಲಿ ಬೆಳೆ ನಷ್ಟನಿರ್ಧರಿಸಲಾಗುವುದು.
ಸದರಿ ಬೆಳೆ ನಷ್ಟದ ವರದಿಯನ್ನು ಜಿಲ್ಲೆಗಳ ಇಲಾಖಾಮುಖ್ಯಸ್ಥರು ಅನುಷ್ಟಾನ ವಿಮಾ ಸಂಸ್ಥೆಗಳಿಗೆ ನೇರವಾಗಿಸಲ್ಲಿಸಲು ಕ್ರಮ ಕೈಗೊಳ್ಳುವುದು.
1. Post Harvest Losses
ಯೋಜನೆಯಡಿ ಬೆಳೆ ಕಟಾವಿನ ನಂತರ ಬೆಳೆಯನ್ನುಜಮೀನಿನಲ್ಲೆ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ (Post Harvest Losses) ಕಟಾವು ಮಾಡಿದ ಎರಡುವಾರಗಳೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕಮಳೆಯಿಂದಾಗಿ ಬೆಳೆ ನಾಶವಾದರೆ ವೈಯುಕ್ತಿಕವಾಗಿ(Case to Case basis) ವಿಮಾ ಸಂಸ್ಧೆಯು ನಷ್ಟ ನಿರ್ಧಾರ ಮಾಡಿಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಒಳಪಡಿಸಲಾಗಿದೆ.
ಬೆಳೆ ವಿಮೆ ಮಾಡಿಸಿದ ರೈತರು ಯಾರಿಗೆ ಸಂಪರ್ಕಿಸಬೇಕು?

ಬೆಳೆ ವಿಮೆ ಮಾಡಿಸಿದ ರೈತರು ಯಾವ ವಿಮಾ ಕಂಪನಿಗೆ ಹಣ ಪಾವತಿಸಿದ್ದಾರೋ ಆ ವಿಮಾ ಕಂಪನಿಗೆ ಸಂಪರ್ಕಿಸಬೇಕು. ಒಂದು ವೇಳೆ ವಿಮಾ ಕಂಪನಿಯ ನಂಬರ್‌ ಗೊತ್ತಿಲ್ಲದಿದ್ದರೆ ಬೆಳೆ ವಿಮೆ ಉಚಿತ ಸಹಾಯವಾಣಿ 1800 180 1551 ನಂಬರಿಗೆ ಕರೆ ಮಾಡಿ ನಿಮ್ಮ ಜಿಲ್ಲೆ ವಿಮಾ ಕಂಪನಿಯ ನಂಬ‌ರ್ ಪಡೆದು ಕರೆ ಮಾಡಬೇಕು.

ಬೆಳೆ ವಿಮೆ ಹಣ ಎಷ್ಟು ಜಮೆಯಾಗುತ್ತದೆ?

ಬೆಳೆ ವಿಮೆ ಮಾಡಿಸಿದ ನಂತರ ಬೆಳೆ ಎಷ್ಟು ಪ್ರಮಾಣದಲ್ಲಿ ಹಾಳಾಗಿದೆ ಹಾಗೂ ಬೆಳೆ ಯಾವ ಹಂತದಲ್ಲಿ ಹಾಳಾಗಿದೆ ಎಂಬುದನ್ನು ನಿರ್ಧರಿಸಿ ರೈತರಿಗೆ ವಿಮೆ ಹಣ ಪಾವತಿಸಲಾಗುವುದು.
]]>
Wed, 18 Jun 2025 22:30:39 +0530 shivuagrico
Panchamitra what’s app service&ಇನ್ನು ಮುಂದೆ ನಿಮ್ಮ ವಾಟ್ಸಪ್ ನಲ್ಲೆ ಸಿಗಲಿವೆ ಗ್ರಾಮ ಪಂಚಾಯತಿಯ ಎಲ್ಲಾ ಸೇವೆಗಳು, ವಾಟ್ಸಪ್ ನಲ್ಲಿ ಹೀಗೆ ಮೇಸೆಜ್ ಮಾಡಿ https://krushirushi.in/Panchamitra-what’s-app-service-2174 https://krushirushi.in/Panchamitra-what’s-app-service-2174 Panchamitra what’s app service-ಇನ್ನು ಮುಂದೆ ನಿಮ್ಮ ವಾಟ್ಸಪ್ ನಲ್ಲೆ ಸಿಗಲಿವೆ ಗ್ರಾಮ ಪಂಚಾಯತಿಯ ಎಲ್ಲಾ ಸೇವೆಗಳು, ವಾಟ್ಸಪ್ ನಲ್ಲಿ ಹೀಗೆ ಮೇಸೆಜ್ ಮಾಡಿ

ಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಅದೇನು ಅಂದ್ರೇ ಜಸ್ಟ್ ಈ ನಂಬರ್ ಗೆ ವಾಟ್ಸಾಪ್ (WhatsApp) ಮಾಡಿ ಸಾಕು.

ಅದು ಹೇಗೆ ಅಂತ ಮುಂದೆ ಓದಿ.

ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಗ್ರಾಮ ಪಂಚಾಯ್ತಿ ಸೇವೆಗಳು ಕುಳಿತಲ್ಲೇ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭಿಸಲಾಗಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಪಡೆಯಬಹುದಾಗಿದೆ.

ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ.

ಕುಂದು-ಕೊರತೆಗಳನ್ನು ಹಾಗೂ ಸಮಸ್ಯೆಗಳನ್ನು ದಾಖಲಿಸಲು ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಪಂಚಮಿತ್ರ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಗ್ರಾಮೀಣ ಜನತೆ ತಮ್ಮೆಲ್ಲಾ ಅಹವಾಲುಗಳನ್ನು ದಾಖಲಿಸಲು ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಬಹುದು. ಅಥವಾ ಅದೇ ಸಂಖ್ಯೆಯಲ್ಲಿ ವಾಟ್ಸಾಪ್ ಚಾಟ್ ಮೂಲಕವೂ ಅಹವಾಲು ಸಲ್ಲಿಸಬಹುದು.

 ಸಾರ್ವಜನಿಕರು ತಮಗೆ ಅವಶ್ಯಕತೆ ಇರುವ ಗ್ರಾ.ಪಂ.ಗಳಲ್ಲಿ ಲಭ್ಯ ಸೇವೆಗಳಿಗೆ ಅರ್ಜಿ ಸಲ್ಲಿಸಲು, ವಿವಿಧ ಮಾಹಿತಿ, ವಿವರಗಳನ್ನು ಪಡೆಯಲು ಹಲವಾರು ವೆಬ್​ಸೈಟ್‌ ಮತ್ತು ಪೋರ್ಟಲ್​ಗಳಿಗೆ ಭೇಟಿ ನೀಡಬೇಕಾಗಿತ್ತು. ಅಲ್ಲದೇ, ಗ್ರಾ.ಪಂ.ಗಳಿಗೆ ಸಂಬಂಧಿಸಿದ ಎಲ್ಲಾ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಲು ಯಾವುದೇ ನಿರ್ದಿಷ್ಟವಾದ ವೆಬ್​ಸೈಟ್‌ ಅಥವಾ ಪೋರ್ಟಲ್​ಗಳು ಇರಲಿಲ್ಲ. ಈ ಹಿನ್ನೆಲೆಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ಪಂಚಮಿತ್ರ ಎಂಬ ವಿನೂನತ ವಾಟ್ಸ್‌ಆ್ಯಪ್‌ ಚಾಟ್‌ ಅನ್ನು ಅನುಷ್ಠಾನಕ್ಕೆ ತರಲಾಗಿದೆ. ಪಂಚಮಿತ್ರದ ವಾಟ್ಸ್‌ಆ್ಯಪ್‌ ನಂ. 8277506000 ಮೂಲಕವೇ ಇನ್ನು ಮುಂದೆ ಸಾರ್ವಜನಿಕರು ಗ್ರಾ.ಪಂ.ಗಳಗಳಲ್ಲಿ ಲಭ್ಯವಿರುವ ಕಟ್ಟಡ ನಿರ್ಮಾಣ ಲೈಸೆನ್ಸ್, ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜಿನ ಸಂಪರ್ಕ ಕಡಿತ, ವ್ಯಾಪಾರ ಪರವಾನಗಿ ಸೇರಿದಂತೆ ಇತರೆ ಎಲ್ಲ ಸೇವೆಗಳಿಗೆ ಅರ್ಜಿ ಸಲ್ಲಿಸಬಹುದು. ಬಳಿಕ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಅದೇ ರೀತಿ ತಮ್ಮ ಗ್ರಾಂ.ಪಂ. ವ್ಯಾಪ್ತಿಯ ಬೀದಿ ದೀಪ ನಿರ್ವಹಣೆ, ಕುಡಿಯುವ ನೀರು, ರಸ್ತೆ-ಸೇತುವೆ ದುರಸ್ತಿ, ತ್ಯಾಜ್ಯ ನಿರ್ವಹಣೆ ಸಮಸ್ಯೆ, ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆಗೆ ಮತ್ತು ಪಂಚಾಯತ್‌ ರಾಜ್‌ ವಿಷಯಗಳಿಗೆ ಸಂಬಂಧಿತ 78 ವ‌ರ್ಗಗಳ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಬಹುದಾಗಿದೆ ಹಾಗೂ ಕುಂದುಕೊರತೆಯ ಸ್ಥಿತಿಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸಬಹುದಾಗಿದೆ.

ಅಲ್ಲದೆ, ಚುನಾಯಿತ ಪ್ರತಿನಿಧಿಗಳ ವಿವರಗಳು, ಅಧಿಕಾರಿ, ಸಿಬ್ಬಂದಿ ವಿವರಗಳು, ಪೂರ್ಣಗೊಂಡ ಗ್ರಾಮ ಪಂಚಾಯಿತಿ ಸಭೆಗಳ ನಡಾವಳಿಗಳು, ಗ್ರಾಮ ಪಂಚಾಯಿತಿಗಳ ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು, ಟೆಂಡರ್‌ಗಳು, ಸೇವೆಗಳ ವಿವರಗಳು, ಸ್ವ-ಸಹಾಯ ಗುಂಪಿನ ವಿವರಗಳು, ಆರ್‌ಟಿಐ ದಾಖಲೆಗಳು ಲಭ್ಯವಾಗಲಿವೆ.

ವಾಟ್ಸಪ್ ಚಾಟ್‌ನಲ್ಲಿ  ಮಾಹಿತಿ ಪಡೆಯೋದು ಹೇಗೆ?

ನಿಮ್ಮ ಮೊಬೈಲ್‌ನಲ್ಲಿ ಇಲಾಖೆಯ ವಾಟ್ಸ್‌ಆ್ಯಪ್‌ ಚಾಟ್‌ ನಂಬರ್‌- 8277506000 ಅನ್ನು ಸೇವ್‌ ಮಾಡಿಕೊಂಡು ಚಾಟ್‌ ಆರಂಭಿಸಿ, Hi ಎಂದು ಮೇಸೆಜ್ ಮಾಡಿ

ನಂತರ ಭಾಷೆಯನ್ನು ಆಯ್ಕೆ ಮಾಡಿ

ನಂತರ ತಾನಾಗಿಯೇ ಕೆಲ ಆಯ್ಕೆಗಳು ಆರಂಭವಾಗುತ್ತಾ ಸಾಗುತ್ತದೆ. ಕ್ರಮ ಸಂಖ್ಯೆಗಳನ್ನು ನಮೂದಿಸುವ ಮೂಲಕ ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮ ಆಯ್ಕೆ ಮಾಡಿಕೊಳ್ಳಿ

 ನೀವು ಬಯಸುವ ಗ್ರಾ.ಪಂಚಾಯಿತಿ ಆಯ್ಕೆ ಮಾಡಿಕೊಂಡು ಅಲ್ಲಿನ ಚುನಾಯಿತಿ ಪ್ರತಿನಿಧಿಗಳು, ಸಿಬ್ಬಂದಿಯ ಮಾಹಿತಿ ಪಡೆಯಬಹುದು.

ಅದೇ ರೀತಿ ಸ್ವಾಧೀನ ಪ್ರಮಾಣಪತ್ರ, ರಸ್ತೆ, ಅಗೆವುದಾಕ್ಕಾಗಿ ಅನುಮತಿ, ಕೈಗಾರಿಕಾ/ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ, ನಿರಾಕ್ಷೇಪಣಾ ಪತ್ರ, ನರೇಗಾ ಅಡಿಯಲ್ಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ, ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು, ಹೊಸ/ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ/ನಿಯಮಿತಗೊಳಿವಿಕರ, ಹೊಸ/ಅಸ್ತಿತ್ವದಲ್ಲಿರುವ ಓವರ್‌ಗೌಂಡ್ ಕೇಬಲ್ ಮೂಲಸೌಕರ್ಯ/ಭೂಗತ ಕೇಬಲ್ ಮೂಲಸೌಕರ್ಯಗಳ ಅನುಮತಿ/ನಿಯಮಿತಗೊಳಿಸುವಿಕೆ, ನಮೂನೆ 9/11ಎ, ನಮೂನೆ 11 ಬಿ ಸೇರಿ ಎಲ್ಲ ಸೇವೆಗಳಿಗೆ ಅರ್ಜಿ ಸಲ್ಲಿಸಬಹುದು. ಕುಂದುಕೊರತೆಗಳನ್ನು ದಾಖಲಿಸಬಹುದು.

ಈ ಮೇಲಿನ ನಾಡಕಛೇರಿ ಸೇವೆಗಳನ್ನು ಪಡೆಯಲು, (https://nadakacheri.karnataka.gov.in/Online_service/loginpage.aspx ) ವೆಬ್‌ ಸೈಟ್‌ ಗೆ ಭೇಟಿ ನೀಡಿ 

ಪಂಚಮಿತ್ರ ವೆಬ್ಸೈಟ್ ಲಿಂಕ್ https://panchatantra.kar.nic.in/panchamitra/

]]>
Wed, 18 Jun 2025 14:06:47 +0530 shivuagrico
Kumbadrona male&ಕುಂಭದ್ರೋಣ ಮಳೆಯ ಅರ್ಭಟ,ಈ ಜಿಲ್ಲೆಗಳಲ್ಲಿ ಜೂನ್ 21 ರವರೆಗೆ ಭಾರಿ ಮಳೆ ಮುನ್ಸೂಚನೆ https://krushirushi.in/Kumbadrona-male-2173 https://krushirushi.in/Kumbadrona-male-2173 Kumbadrona male-ಕುಂಬದ್ರೊಣ ಮಳೆಯ ಅರ್ಬಟ,ಈ ಜಿಲ್ಲೆಗಳಲ್ಲಿ ಜೂನ್ 21 ರವರೆಗೆ ಭಾರಿ ಮಳೆ ಮುನ್ಸೂಚನೆ


ರಾಜ್ಯಾದ್ಯಂತ ಮುಂಗಾರು ಮಳೆ ಹೆಚ್ಚಾಗಿದ್ದು ಕರಾವಳಿ, ಮಲೆನಾಡು ಭಾಗಗಳಲ್ಲಿ ಗುಡುಗು, ಭಾರೀ ಬಿರುಗಾಳಿ ಇದ್ದು ಕುಂಭದ್ರೋಣ ಮಳೆಯಾಗುತ್ತಿದೆ. ಕಳೆದೊಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು ಮುಂದಿನ ಜೂನ್ 21ರವರೆಗೂ ಮಳೆ ಮುನ್ಸೂಚನೆ ನೀಡಿರುವ ಐಎಂಡಿ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. 

ಹವಾಮಾನ ಇಲಾಖೆ ಕೆಲವು ಭಾಗಗಳಲ್ಲಿ ಪ್ರವಾಹ, ಭೂಕುಸಿತದ ಎಚ್ಚರಿಕೆ ನೀಡಲಾಗಿದೆ. 

ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್: 
ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನಿಂದ ಕೂಡಿದ ಬಿರುಗಾಳಿ ಸಹಿತ ಭಾರೀ ಮಲೆಯಾಗುವ ನಿರೀಕ್ಷೆಯಿದ್ದು ಈ ಆರೂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. 

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆಯ ತೀವ್ರತೆ ಕಡಿಮೆಯಾಗುವ ಮುನ್ಸೂಚನೆ ಇದೆ. ಆದರೆ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಈಗಿನಂತೆ ಜೂನ್ 18ರಿಂದ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಜೂನ್ 19ರಿಂದ 21ರ ತನಕ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಸಣ್ಣ ಅವಕಾಶ ಸಿಗಬಹುದು (ದಿನದಲ್ಲಿ 1 ಕೆಲವು ಭಾಗಗಳಲ್ಲಿ 2 ಬ್ಯಾರೆಲ್ ಸ್ಪ್ರೇ ಮಾಡಬಹುದು). 

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ  ಕಡಿಮೆಯಾದರೂ, ಬಿಟ್ಟು ಬಿಟ್ಟು ಜೋರು ಮಳೆಯ ಮುನ್ಸೂಚನೆ ಇದೆ. ( ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಜಾಸ್ತಿ ಇರಬಹುದು). ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಹಾಗೂ ಉಳಿದ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಜೂನ್ 18ರಿಂದ ಮತ್ತಷ್ಟು ಕಡಿಮೆಯಾದರೂ ಜೂನ್ 22ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. 


ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 


ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 


ಈಗಿನಂತೆ ಜೂನ್ 18ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡ, ಬಿಸಿಲಿನ ವಾತಾವರಣದ ಲಕ್ಷಣಗಳಿವೆ.

ಅರಬ್ಬಿ ಸಮುದ್ರದ ಗುಜರಾತ್ ಕರಾವಳಿಯಲ್ಲಿ ಹಾಗೂ ಬಂಗಾಳಕೊಲ್ಲಿಯ ಬಾಂಗ್ಲಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆಯು ದುರ್ಬಲಗೊಂಡರೂ ಸಂಪೂರ್ಣ ಶಿಥಿಲಗೊಂಡಿಲ್ಲ. ಸಂಪೂರ್ಣ ಶಿಥಿಲಗೊಳ್ಳುವ ತನಕ ಮುಂಗಾರು ಚುರುಕಾಗಿರಬಹುದು.

ಈ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್: 
ಭಾರೀ ಮಳೆ ಹಿನ್ನಲೆಯಲ್ಲಿ  ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಿರುವ ಹವಾಮಾನ ಇಲಾಖೆ, ಮೈಸೂರು, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆಯಿದ್ದು ಯೆಲ್ಲೋ ಅಲರ್ಟ್ ಘೋಷಿಸಿದೆ. 

ಅರಬ್ಬೀ ಸಮುದ್ರದ ಕೊಂಕಣ ಕರಾವಳಿಯಲ್ಲಿ ಭಾರೀ ಬಿರುಗಾಳಿ ಇರುವುದರಿಂದ ಪಶ್ಚಿಮ ದಿಕ್ಕಿನಿಂದ ರಾಜ್ಯಕ್ಕೆ ಪ್ರಬಲ ಗಾಳಿ ಬೀಸುತ್ತಿರುವ ಹಿನ್ನಲೆಯಲ್ಲಿ ಜೂನ್ 17ರಿಂದ ಜೂನ್ 21ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. 



]]>
Wed, 18 Jun 2025 06:56:48 +0530 shivuagrico
PMFME scheme&ಪಿಎಂಎಫ್ಎಂಇ ಯೋಜನೆಯಡಿ 50% ಸಬ್ಸಿಡಿಯಲ್ಲಿ ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ https://krushirushi.in/PMFME-scheme-2172 https://krushirushi.in/PMFME-scheme-2172 PMFME-ಪಿಎಂಎಫ್ಎಂಇ ಯೋಜನೆಯಡಿ 50% ಸಬ್ಸಿಡಿಯಲ್ಲಿ ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ


ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್‌ಕ್ಯೂಬೇಷನ್‌ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.

ಪಿಎಂಎಫ್ಎಮ್ ಇ ಯೋಜನೆಯಡಿ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಅರ್ಜಿ ಆಹ್ವಾನ-pmfme subsidy scheme 

ಯಾವ ಯಾವ ಉದ್ಯಮ ಮಾಡಬಹುದು?
 ರೊಟ್ಟಿ ಮಾಡುವ ಯಂತ್ರ, ಎಣ್ಣೆಗಾಣ, ಬೆಲ್ಲದ ಗಾಣ, ಕಾರದಪುಡಿ ಘಟಕ, ಶಾವಿಗೆ, ಹಪ್ಪಳ-ಸಂಡಿಗೆ, ಹಿಟ್ಟಿನ ಗಿರಣಿ, ಬೇಕರಿ ಉತ್ಪನ್ನ, ಹಾಲಿನ ಉತ್ಪನ್ನ, ಉಪ್ಪಿನಕಾಯಿ ಸೇರಿದಂತೆ ಕಿರು ಆಹಾರ ಸಂಸ್ಕರಣೆ

 ಅರ್ಜಿ ಸಲ್ಲಿಸುವುದು ಹೇಗೆ?
 ಅರ್ಜಿ ಸಲ್ಲಿಸುವವರು http://mofpi.nic.in/pmfme/ ಪೋರ್ಟಲ್ ನಲ್ಲಿ ವಿವರಗಳನ್ನು ಭರ್ತಿ ಮಾಡಬೇಕು ಅಥವಾ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಮೂಲಕ ಕೂಡ ಅರ್ಜಿ ವಿವರಗಳನ್ನು ಭರ್ತಿ ಮಾಡಿಸಬಹುದು. ಜಿಲ್ಲಾ ಮಟ್ಟದಲ್ಲಿ ನೇಮಿಸಲ್ಪಟ್ಟ ಸಂಪನ್ಮೂಲ ವ್ಯಕ್ತಿಗಳು(District resource person) ಅರ್ಜಿ ಹಾಗೂ ಯೋಜನಾ ವರದಿ(Detail project report) ಪರಿಶೀಲಿಸಿ ಜಿಲ್ಲಾ ಮಟ್ಟದ ಸಮಿತಿಗೆ ಸಲ್ಲಿಸುತ್ತಾರೆ. ಸಮಿತಿ ಅಧ್ಯಕ್ಷರು ಜಂಟಿ ಕೃಷಿ ನಿರ್ದೇಶಕ ರಾಗಿದ್ದು, ಸದರಿ ಅರ್ಜಿಗಳನ್ನು ಸಮಿತಿಯಲ್ಲಿಟ್ಟು ಅರ್ಹ ಫಲಾನುಭವಿಗಳ ಆಯ್ಕೆ ಮಾಡಿಕೊಂಡು, ಬ್ಯಾಂಕ್ಗಳಿಗೆ ಸಾಲ ಮಂಜೂರಾತಿಗಾಗಿ ಕಳುಹಿಸುತ್ತಾರೆ. ಸಂಸ್ಥೆಗಳ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಸಮಿತಿಯು ನೋಡಲ ಏಜೆನ್ಸಿಗೆ ವರ್ಗಾಯಿಸುತ್ತದೆ ಹಾಗೂ ಅರ್ಜಿದಾರರಿಗೆ ಮಾಹಿತಿ ನೀಡಲು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸಹಕರಿಸುತ್ತಾರೆ. ಒಂದು ವೇಳೆ ಅರ್ಜಿಗಳು ಸಂಸ್ಥೆಗಳಿಂದ ಗುಂಪು ಅರ್ಜಿಗಳ ಆಗಿದ್ದಲ್ಲಿ ಜಿಲ್ಲಾ ಮಟ್ಟದ ಸಮಿತಿ ವರದಿ ಸಲ್ಲಿಸುತ್ತದೆ.ರಾಜ್ಯ ಮಟ್ಟದ ಸಮಿತಿಗೆ ಸಲ್ಲಿಸುತ್ತದೆ. 15 ಲಕ್ಷಕ್ಕೂ ಹೆಚ್ಚು ಸಹಾಯಧನ ಬೇಕಾಗಿದ್ದಲ್ಲಿ ಸದರಿ ಅರ್ಜಿಗಳನ್ನು ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ಯಮಗಳ ಮಂತ್ರಾಲಯಕ್ಕೆ ಅನುಮೋದನೆಗಾಗಿ ಕಳುಹಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್(Aadhar card)
ಪ್ಯಾನ್ ಕಾರ್ಡ್(Pan card)
ಬ್ಯಾಂಕ್ ಪಾಸಬುಕ್(Bank passbook)

PMFME-ಕಿರು ಆಹಾರ ಉದ್ಯಮ ಸ್ಥಾಪನೆಗೆ 50% ಸಬ್ಸಿಡಿ,ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ಜಿಲ್ಲೆಗಳ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ (DRP contact number) ಸಂಪರ್ಕ ಸಂಖ್ಯೆ ತಿಳಿಯಲು ಈ ಕೆಳಗಿನ pdf download ಮಾಡಿಕೊಳ್ಳಿ
]]>
Tue, 17 Jun 2025 19:47:37 +0530 shivuagrico
Ineligible pension holder&ರಾಜ್ಯದ 23 ಲಕ್ಷ ಜನರ ಪಿಂಚಣೆ ರದ್ದು https://krushirushi.in/Ineligible-pension-holder-2171 https://krushirushi.in/Ineligible-pension-holder-2171 Ineligible pension holder-ರಾಜ್ಯದ 23 ಲಕ್ಷ ಜನರ ಪಿಂಚಣೆ ರದ್ದು


ಸಾಮಾಜಿಕ ಭದ್ರತೆ ಯೋಜನೆಯಡಿ ಅಸಹಾಯಕ, ಅಶಕ್ತ, ವೃದ್ಧರು, ಅಂಗವಿಕಲರು ಮತ್ತು ವಿಧವೆಯರಿಗೆ ನೀಡುವ ಮಾಸಿಕ ಪಿಂಚಣಿ ಪಡೆಯುತ್ತಿರುವವರ ಪೈಕಿ 23.19 ಲಕ್ಷ ಅನರ್ಹರನ್ನು ಗುರುತಿಸಿರುವ ರಾಜ್ಯ ಸರ್ಕಾರ ಕೂಡಲೇ ಅವರನ್ನು ಅರ್ಹರ ಪಟ್ಟಿಯಿಂದ ಹೊರಹಾಕಿ ಬೊಕ್ಕಸ ಸೋರಿಕೆ ತಪ್ಪಿಸಲು ಮುಂದಾಗಿದೆ.

ಮುಖ್ಯಾಂಶಗಳು

21.87 ಲಕ್ಷ ವೃದ್ಧಾಪ್ಯ ಫಲಾನುಭವಿಗಳ ಪೈಕಿ 9.04 ಲಕ್ಷ ಅನರ್ಹ
31.33 ಲಕ್ಷ ಸಂಧ್ಯಾ ಸುರಕ್ಷಾ ಕಾರ್ಡ್ ಪೈಕಿ 14.15 ಲಕ್ಷ ರದ್ದು
ಕುಟುಂಬ ದತ್ತಾಂಶ ದಿಂದ ಅನರ್ಹ ಫಲಾನುಭವಿಗಳು ಪತ್ತೆ
ರಾಜ್ಯದಲ್ಲಿ 65 ವರ್ಷ ಅಥವಾ ಮೇಲ್ಪಟ್ಟ ವಯಸ್ಸಿನ ಹಿರಿಯ ಜೀವಗಳನ್ನು ಅರ್ಥಿಕ ಸಂಕಷ್ಟದಿಂದ ಪಾರು ಮಾಡುವ ದಿಶೆಯಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯಡಿ 1 ಸಾವಿರ ರೂ. ಮಾಸಾಶನ ನೀಡಲಾಗುತ್ತಿದೆ. ಇದೇ ರೀತಿಯಾಗಿ 60 ವರ್ಷ ಅಥವಾ ಮೇಲ್ಪಟ್ಟ ಹಿರಿಯರಿಗೆ ವೃದ್ಧಾಪ್ಯ ವೇತನ ಯೋಜನೆಯಡಿ 800 ರೂ. ಮಾಸಾಶನ ನೀಡಲಾಗುತ್ತಿದೆ.

ಪ್ರಸ್ತುತ ರಾಜ್ಯದಲ್ಲಿ ವೃದ್ಧಾಪ್ಯ ವೇತನ ಯೋಜನೆಯಡಿ 21.87 ಲಕ್ಷ ಹಾಗೂ ಸಂಧ್ಯಾ ಸುರಕ್ಷಾ ಯೋಜನೆಯಡಿ 31.33 ಲಕ್ಷ ಫಲಾನುಭವಿಗಳಿಗೆ ಪಿಂಚಣಿ ಪಡೆಯುತ್ತಿದ್ದಾರೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು ಇದೆ. ಆದರೆ, ಅಧಿಕೃತ ದತ್ತಾಂಶಕ್ಕಿಂತ ಅಧಿಕ ಜನರು ಮಾಸಾಶನ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯ ಸರ್ಕಾರ ಫಲಾನುಭವಿಗಳ ವಿವರಗಳನ್ನು ಕುಟುಂಬ ದತ್ತಾಂಶದ ಮಾಹಿತಿಯೊಂದಿಗೆ ಹೋಲಿಕೆ ಮಾಡಿದೆ.

ನಿಗದಿಗಿಂತ ಕಡಿಮೆ ವಯಸ್ಸಿನವರು, ಶ್ರೀಮಂತರು, ಎಪಿಎಲ್ ಕಾರ್ಡ್, ಆದಾಯ ತೆರಿಗೆ ಪಾವತಿದಾರರು, ಅರೆ-ಸರ್ಕಾರಿ ನಿವೃತ್ತ ನೌಕರರ (ಎಚ್​ಆರ್​ಎಂಎಸ್) ದತ್ತಾಂಶಗೊಂದಿಗೆ ಸಂಯೋಜನೆ ಮಾಡಿದಾಗ ದೊಡ್ಡ ಪ್ರಮಾಣದಲ್ಲಿ ಅನರ್ಹರು ಪತ್ತೆಯಾಗಿದ್ದಾರೆ. ವೃದ್ಧಾಪ್ಯ ವೇತನ ಯೋಜನೆ ಅಂದಾಜು 9.04 ಲಕ್ಷ, ಸಂಧ್ಯಾ ಸುರಕ್ಷಾ ಅಡಿ 14.15 ಲಕ್ಷ ಅನರ್ಹರು ಬೆಳಕಿಗೆ ಬಂದಿದ್ದಾರೆ.

ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಕಾರ್ಡ್​ಗಳನ್ನು ರದ್ದು ಮಾಡಲು ಕಂದಾಯ ಇಲಾಖೆ ಆದೇಶಿಸಿದೆ. ಬಡವರ ಪಿಂಚಣಿ ಹಣದಲ್ಲೂ ಉಳಿತಾಯಕ್ಕೂ ಮುಂದಾಗಿರುವ ಸರ್ಕಾರ ದಿವಾಳಿ ಅಂಚಿಗೆ ತಲುಪಿದೆ ಎಂಬುದಕ್ಕೆ ಇದಕ್ಕಿಂತ ಸಾಕ್ಷ್ಯ ಬೇಕೆ?

| ಸುನಿಲ್ ಕುಮಾರ್ ಕಾರ್ಕಳ ಶಾಸಕ

ಸರ್ಕಾರಕ್ಕೆ ಲಾಭವೇನು?

1. ಬೊಕ್ಕಸಕ್ಕೆ ದೊಡ್ಡ ಪ್ರಮಾಣದ ಉಳಿತಾಯ

2. ಅರ್ಹರಿಗೆ ಯೋಜನೆ ಲಾಭ ಸಿಗುವ ತೃಪ್ತಿ

3. ಯೋಜನೆ ದುರು ಪಯೋಗಕ್ಕೆ ಕಡಿವಾಣ

4. ನೈಜ ಹೊಸ ಫಲಾನು ಭವಿಗಳಿಗೆ ಅನುಕೂಲ

5. ಆಡಳಿತ ಯಂತ್ರದ ಮೇಲೆ ಹೊರೆ ಕಡಿಮೆ

9 ಸಾವಿರ ಕೋಟಿ ರೂಪಾಯಿ ವೆಚ್ಚ

ಸಾಮಾಜಿಕ ಭದ್ರತಾ ಯೋಜನೆಯಲ್ಲಿ ಕೇಂದ್ರದ ಪಾಲು ಅತ್ಯಲ್ಪ. ಅಂದರೆ ಒಂದು ಸಾವಿರ ಕೋಟಿ ರೂ.ಗಿಂತ ಕಡಿಮೆ ವೆಚ್ಚ ಮಾಡುತ್ತಿದೆ. ಆದರೆ ರಾಜ್ಯ ಸರ್ಕಾರ 9 ಸಾವಿರ ಕೋಟಿ ರೂ.ಗೂ ಹೆಚ್ಚು ವೆಚ್ಚ ಮಾಡುತ್ತಿದೆ. ಇದೀಗ ಅನರ್ಹರನ್ನು ಪಟ್ಟಿಯಿಂದ ಹೊರಗಿಟ್ಟರೆ ಸರ್ಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಹೊರೆ ಕಡಿಮೆಯಾಗಲಿದೆ.

ಅನರ್ಹರನ್ನು ಕಂಡು ಹಿಡಿದಿದ್ದು ಹೇಗೆ?

ಎಚ್​ಆರ್​ಎಂಎಸ್ ಮೂಲಕ ಅನರ್ಹ ಪಿಂಚಣಿದಾರರು ಪತ್ತೆ
ಆದಾಯ ತೆರಿಗೆ ಪಾವತಿಸುವವರ ಮಾಹಿತಿ ಮೂಲಕವೂ ಬೆಳಕಿಗೆ
ಆಧಾರ್ ಕಾರ್ಡ್​ನ ದತ್ತಾಂಶ ಆಧರಿಸಿ ವಯೋಮಾನದಲ್ಲಿ ಸ್ಪಷ್ಟತೆ
ಕುಟುಂಬ ತಂತ್ರಾಂಶದಲ್ಲಿನ ದತ್ತಾಂಶದ ವಿಶ್ಲೇಷಣೆಯಲ್ಲೂ ಮಾಹಿತಿ


ಅನರ್ಹ ಪಡಿತರದಾರರು 44 ಲಕ್ಷ

ರಾಜ್ಯದಲ್ಲಿ 44 ಲಕ್ಷ ಅನರ್ಹ ಪಡಿತರ ಫಲಾನುಭವಿಗಳು ಇದ್ದಾರೆ ಎಂದು ಪತ್ತೆಹಚ್ಚಿ ಕಾರ್ಡ್ ರದ್ದುಪಡಿಸಲು ರಾಜ್ಯ ಸರ್ಕಾರ ಥರ್ಡ್ ಪಾರ್ಟಿ ಸರ್ವೆಗೆ ನಿರ್ಧರಿಸಿದೆ. 2011ರ ಜನಸಂಖ್ಯೆ ದತ್ತಾಂಶದ ಪ್ರಕಾರ 4,01,93,130 ಸ್ವೀಕೃತದಾರರ ಮಿತಿ ನಿಗದಿ ಮಾಡಲಾಗಿದೆ. ಆದರೆ, 44 ಲಕ್ಷ ಹೆಚ್ಚುವರಿ ಕಾರ್ಡ್ ಇರುವುದಾಗಿ ಹೇಳುತ್ತಿದೆ.

Pension amount status check-ಪಿಂಚಣೆ ಹಣ 1200 ರಿಂದ 2000 ಕ್ಕೆ ಹೆಚ್ಚಳ

ಕೇಂದ್ರ ಸರ್ಕಾರ ಇತ್ತೀಚೆಗೆ ವಿಧವಾ ಪಿಂಚಣಿ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ, ಇದು ಲಕ್ಷಾಂತರ ಮಹಿಳೆಯರಿಗೆ ಪರಿಹಾರವನ್ನು ತರುತ್ತದೆ. ಈ ಹೆಚ್ಚಳದೊಂದಿಗೆ, ಪಿಂಚಣಿ ಮೊತ್ತವನ್ನು ಗಮನಾರ್ಹವಾಗಿ ಹೆಚ್ಚಿಸಲಾಗಿದ್ದು, ಇದರಿಂದಾಗಿ ಮಹಿಳೆಯರು ಉತ್ತಮ ಆರ್ಥಿಕ ಸಹಾಯವನ್ನು ಪಡೆಯಬಹುದು.

ವಿಧವಾ ಪಿಂಚಣಿ ಯೋಜನೆಯಡಿಯಲ್ಲಿ ಪಡೆಯುವ ಮೊತ್ತವನ್ನು ಮಹತ್ತರವಾಗಿ ಹೆಚ್ಚಿಸಲಾಗಿದೆ. ಮೊದಲು ಈ ಯೋಜನೆಯಲ್ಲಿ ತಿಂಗಳಿಗೆ 500 ರಿಂದ 1000 ರೂಪಾಯಿಗಳವರೆಗೆ ಸಿಗುತ್ತಿತ್ತು ಆದರೆ ಈಗ ಅದನ್ನು ತಿಂಗಳಿಗೆ 2000 ರಿಂದ 3000 ಕ್ಕೆ ಹೆಚ್ಚಿಸಲಾಗಿದೆ. ಇದರರ್ಥ ಮಹಿಳೆಯರು ಮೊದಲಿಗಿಂತ ಹೆಚ್ಚಿನ ಆರ್ಥಿಕ ಸಹಾಯವನ್ನು ಪಡೆಯಲು ಸಾಧ್ಯವಾಗುತ್ತದೆ, ಆದರೂ ಪ್ರತಿ ರಾಜ್ಯ ಸರ್ಕಾರವನ್ನು ಅವಲಂಬಿಸಿ ಮೊತ್ತವು ಸ್ವಲ್ಪ ಬದಲಾಗಬಹುದು. ಆದರೆ ಕೇಂದ್ರ ಸರ್ಕಾರದ ಶಿಫಾರಸಿನ ನಂತರ, ಇದನ್ನು ಅನೇಕ ರಾಜ್ಯಗಳಲ್ಲಿ ಜಾರಿಗೆ ತರಲಾಗಿದ್ದು, ಇದು ಮಹಿಳೆಯರ ಜೀವನವನ್ನು ಸ್ವಲ್ಪ ಸುಲಭಗೊಳಿಸುತ್ತದೆ.

ಪ್ರಮುಖ ಬದಲಾವಣೆಗಳು

ಪಿಂಚಣಿ ಮೊತ್ತ ₹1000 ದಿಂದ ₹2000 ಕ್ಕೆ ಏರಿಕೆ.
ಈಗ ನೀವು ಪ್ರತಿ ತಿಂಗಳು ₹2000 ರಿಂದ ₹3000 ಪಡೆಯುತ್ತೀರಿ.
ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ನಿಯಮಗಳು.

ಈ ಯೋಜನೆಯ ಲಾಭವನ್ನು ಯಾರು ಪಡೆಯಬಹುದು

ಮಹಿಳೆಯ ವಯಸ್ಸು 18 ವರ್ಷಗಳು ಆಗಿರಬೇಕು.
ಮಹಿಳೆಯ ವಾರ್ಷಿಕ ಆದಾಯವು ಸರ್ಕಾರ ನಿಗದಿಪಡಿಸಿದ ಮಿತಿಗಿಂತ ಕಡಿಮೆಯಿರಬೇಕು.
ಮಹಿಳೆಗೆ ಬೇರೆ ಯಾವುದೇ ಸರ್ಕಾರಿ ಪಿಂಚಣಿ ಯೋಜನೆಯ ಲಾಭ ಸಿಗಬಾರದು
ಮಹಿಳೆಯ ಹೆಸರಿನಲ್ಲಿ ಯಾವುದೇ ದೊಡ್ಡ ಆಸ್ತಿ ಅಥವಾ ಕೃಷಿ ಭೂಮಿ ಇರಬಾರದು.
ಈ ಷರತ್ತುಗಳನ್ನು ಪೂರೈಸುವ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬಹುದು.

ಪತಿಯ ಮರಣದ ನಂತರ ಆರ್ಥಿಕವಾಗಿ ದುರ್ಬಲರಾಗಿರುವ ಮತ್ತು ಉತ್ತಮ ಜೀವನ ನಡೆಸಲು ಸಹಾಯ ಬಯಸುವ ಮಹಿಳೆಯರಿಗಾಗಿ ಈ ಯೋಜನೆ ಇದೆ.

ಅರ್ಜಿ ಸಲ್ಲಿಸುವುದು ಹೇಗೆ?

ನೀವು ಈ ಯೋಜನೆಯ ಲಾಭ ಪಡೆಯಲು ಬಯಸಿದರೆ, ಅರ್ಜಿ ಸಲ್ಲಿಸುವುದು ತುಂಬಾ ಸುಲಭ. ನೀವು ಆನ್‌ಲೈನ್ ಮತ್ತು ಆಫ್‌ಲೈನ್ ಎರಡರಲ್ಲೂ ಅರ್ಜಿ ಸಲ್ಲಿಸಬಹುದು.

ರಾಜ್ಯಗಳಾದ್ಯಂತ ಪಿಂಚಣಿ ಮೊತ್ತ

ದೇಶದ ವಿವಿಧ ರಾಜ್ಯಗಳಲ್ಲಿ ಪಿಂಚಣಿ ಮೊತ್ತವು ಬದಲಾಗಬಹುದು. ಕೆಲವು ರಾಜ್ಯಗಳ ಪಿಂಚಣಿ ಮೊತ್ತದ ಬಗ್ಗೆ ಇಲ್ಲಿದೆ ಮಾಹಿತಿ

ರಾಜ್ಯ ಹಿಂದಿನ ಮೊತ್ತ (₹) ಹೊಸ ಮೊತ್ತ (₹)
ಉತ್ತರ ಪ್ರದೇಶ 500 1500₹
ಬಿಹಾರ 600 2000₹
ರಾಜಸ್ಥಾನ 750 2500₹
ಮಧ್ಯಪ್ರದೇಶ 1000 3000₹
ಹರಿಯಾಣ 1200 2500₹
ಮಹಾರಾಷ್ಟ್ರ 800 2000₹
ಕರ್ನಾಟಕ 900 2200₹

ಎಲ್ಲಾ ರೀತಿಯ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://dssp.karnataka.gov.in/dssp/villageWise_list_Of_beneficiaries.aspx

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಅಥವಾ ಪಟ್ಟಣ select ಮಾಡಿ, ಹೊಬಳಿ,ಗ್ರಾಮ select ಮಾಡಿ,Captch type ಮಾಡಿ, Search ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿ ಪಿಂಚಣಿ ಪಡೆಯುವವರ ಹೆಸರು ಸಿಗಲಿದೆ

(ಸೂಚನೆ-Desktop mode open ಮಾಡಿಕೊಳ್ಳಿ)

Pension status-ಈ ತಿಂಗಳ ನಿಮ್ಮ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://dssp.karnataka.gov.in/dssp/Beneficiary_Status.aspx

ನಂತರ ನಿಮ್ಮ ಗ್ರಾಮದ ಪಟ್ಟಿಯಲ್ಲಿ ನಿಮ್ಮ beneficiary ID ಹಾಕಿ,captcha type ಮಾಡಿ search ಮೇಲೆ ಕ್ಲಿಕ್ ಮಾಡಿ

ನಂತರ click here to get payment details from SSP portal ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ beneficiary ID ಹಾಗೂ captcha code ಹಾಕಿ search ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಇಲ್ಲಿಯವರೆಗೆ ಜಮಾ ಆದ ಪಿಂಚಣೆ ಹಣ ಮಾಹಿತಿ ದೊರೆಯಲಿದೆ

ಹೀಗೂ ಚೆಕ್ ಮಾಡಬಹುದು

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ pension ಮೇಲೆ ಕ್ಲಿಕ್ ಮಾಡಿ

ನಂತರ ಇಲ್ಲಿಯವರೆಗೂ ಜಮಾ ಆದ ಪಿಂಚಣೆ ಹಣ(pension amount)ಮಾಹಿತಿ ಸಿಗಲಿದೆ.

]]>
Tue, 17 Jun 2025 13:59:44 +0530 shivuagrico
Pmkisan update&ಪಿಎಂ ಕಿಸಾನ್ 20ನೇ ಕಂತಿಗೆ ದಿನಗಣನೆ,ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ https://krushirushi.in/Pmkisan-update-2170 https://krushirushi.in/Pmkisan-update-2170 ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅರ್ಹ ಸಣ್ಣ ಇಡುವಳಿದಾರ ರೈತರಿಗೆ ಒಂದು ವರ್ಷಕ್ಕೆ 3000 ರೂ.ನಂತೆ ಎರಡು ಕಂತುಗಳಲ್ಲಿ ರೂ.6000 ನೀಡಲಾಗುತ್ತದೆ.

ಈ ಬಗ್ಗೆ ಕೃಷಿ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಒಂದು ವರ್ಷಕ್ಕೆ ರೂ. 6000/-ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ. ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರು ಬಾಕಿಯಿರುವ ಇ-ಕೆವೈಸಿ ಮಾಡಿಸಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದೆ.

ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನಲ್ಲಿ ನೋಂದಾಯಿಸಿರುವ ಮೊಬೈಲ್ ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸುವುದು. ಹಾಗೂ ಈಗಾಗಲೇ ಕೃಷಿ ಇಲಾಖೆಯಿಂದ ತಮ್ಮ ಗ್ರಾಮಗಳಿಗೆ ಗ್ರಾಮ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ PMKISAN e-KYC through Face Recognition App ಮೂಲಕ ಇ-ಕೆವೈಸಿ ಮಾಡಿಸುವಲ್ಲಿ ಗ್ರಾಮ ನೋಡಲ್ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ತಿಳಿಸಿರುತ್ತಾರೆ.

2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ 11 ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ. ರೈತರ ವ್ಯವಸಾಯಕ್ಕೆ ನೆರವಾಗಲು ಸರ್ಕಾರ ಈ ಸ್ಕೀಮ್ ಆರಂಭಿಸಿದೆ. ವರ್ಷಕ್ಕೆ 6,000 ರೂ ಹಣವನ್ನು ರೈತರಿಗೆ ನೀಡಲಾಗುತ್ತದೆ. ವರ್ಷಕ್ಕೆ ಮೂರು ಬಾರಿ, ಅಂದರೆ, ನಾಲ್ಕು ತಿಂಗಳಿಗೊಮ್ಮೆ ತಲಾ 2,000 ರೂ ಹಣವನ್ನು ನೇರವಾಗಿ ರೈತರ ಖಾತೆಗಳಿಗೆ ಹಣ ಹಾಕಲಾಗುತ್ತದೆ.

ಇಲ್ಲಿಯವರೆಗೆ 19 ಕಂತುಗಳನ್ನು ಸರ್ಕಾರ ನೀಡಿದೆ. ಫೆಬ್ರುವರಿ 24ರಂದು 9.8 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ 19ನೇ ಕಂತಿನ ಹಣ ಬಿಡುಗಡೆ ಮಾಡಲಾಗಿತ್ತು. ಈ 9.8 ಕೋಟಿ ರೈತರಲ್ಲಿ 2.41 ಕೋಟಿ ಮಹಿಳೆಯರೇ ಇದ್ದಾರೆ.

ಪಿಎಂ ಕಿಸಾನ್(kisan samman) ಅರ್ಹತೆಯ ಮಾನದಂಡಗಳೇನು?
ಎಲ್ಲ ಅರ್ಹ ಫಲಾನುಭವಿಗಳು ಕನಿಷ್ಠ ಪ್ರಮಾಣದ ಭೂಮಿ ಹೊಂದಿರಬೇಕು. ಇ-ಕೆವೈಸಿ ಮಾಡಿಸಿಕೊಳ್ಳಬೇಕು ಮತ್ತು ಪಿಎಂ-ಕಿಸಾನ್ ಪೋರ್ಟಲ್‌ನಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು. 
ನಿಧಿಯನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಗಾಯಿಸಲಾಗುತ್ತದೆ ಎಂದು ಅವರು ಹೇಳಿದರು.

ಇಲ್ಲಿಯವರೆಗೂ 19 ಕಂತುಗಳಲ್ಲಿ 3.68 ಲಕ್ಷ ಕೋಟಿ ಪಿಎಂ ಕಿಸಾನ್ ಹಣ ರೈತರ ಖಾತೆಗೆ


ಇದುವರೆಗೆ 3.68 ಲಕ್ಷ ಕೋಟಿ ರೂಪಾಯಿಗಳನ್ನು 19 ಕಂತುಗಳಲ್ಲಿ ದೇಶದಾದ್ಯಂತದ ರೈತರಿಗೆ ವಿತರಿಸಲಾಗಿದೆ

ನಿಮಗೇಷ್ಟು ಜಮಾ ಹೀಗೆ ಚೆಕ್ ಮಾಡಿ-Pmkisan beneficiary status 

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/

ಮೊದಲು know your status ಮೇಲೆ ಕ್ಲಿಕ್ ಮಾಡಿ

ನಂತರ know your register number ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ

ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.

ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ

ನಂತರ update your details ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ

 Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.

ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ

Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.

FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ  ಕಾರಣ ಮತ್ತು ಪರಿಹಾರ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

fruitspmk.gov.in ಪೋರ್ಟಲ್ ನಲ್ಲಿ

1

ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ

ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು                                                                     ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು

ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ  (NIC)                     ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ.            ಆ) ಸಮಸ್ಯಾತ್ಮಕ  ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ.

2

ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು

ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ

ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ    ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ

3

ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು

 ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ

ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ   ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ

4

ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ

ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ

OPERATOR ಲಾಗಿನ್ (RSK, ADA office, JDA office)  OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು

5

01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ

ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ

ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ)

6

Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು

ಜಿಲ್ಲೆಗಳಲ್ಲಿ  OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ

AAO ಲಾಗಿನ್  (RSK, ADA office, JDA office)  AAO ಲಾಗಿನ್ನಲ್ಲಿ  ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ,  ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

7

ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ

ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ)

AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.

8

PFMS rejected

Aadhaar Number is not seeded in NPCI

ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ

Bank Name And IFSC Code are not related to each other

ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ

Bank Name is not as per PFMS Bank Master.

Beneficiary is rejected as Account Type is other than SB / SBA / JD

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ)

Duplicate Beneficiary Name , Bank Account No and Bank Name not allowed for same scheme

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

IFSC Code  either not present or currently inactive in tbl BankBranch

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

Incorrect Aadhaar Number

ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

One or more mandatory tags values are missing.

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

Rejected by Bank, Account No does not exist in Bank/INVALID/CLOSED

ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು

ಕ್ರಮ ಸಂಖ್ಯೆ

ಸಮಸ್ಯೆಗಳು

ಕಾರಣಗಳು

ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ

 

pmkisan.gov.in ಪೋರ್ಟಲ್ ನಲ್ಲಿ

9

Amount credited to Account Number-NA

Aadhaar number based payment by GoI

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ.

10

PAYMENT STOPPED BY STATE

 XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳಿದ್ದರೆ ಕೇಂದ್ರ ಕಚೇರಿ ಮಾಹಿತಿ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

11

Transaction failed

ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ

ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ.

12

ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ

OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ

ಕೇಂದ್ರ ಸರ್ಕಾರ                                               ಜಿಲ್ಲೆಗಳಿಂದ ಇಂತಹ ಪ್ರಕರಣಗಳ   ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

13

ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು

ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ.

ಕೇಂದ್ರ ಸರ್ಕಾರ ದ   pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ.

]]>
Tue, 17 Jun 2025 06:34:30 +0530 shivuagrico