ಹಲವು ಕಾರಣಗಳಿಂದ ಪಿಎಂ-ಕಿಸಾನ್ ಯೋಜನೆಯ (PM-KISAN scheme) ಹಣವನ್ನು ರಾಜ್ಯದ ಹಲವಾರು ರೈತರಿಗೆ ಪಾವತಿ ಮಾಡಿರಲಿಲ್ಲ. ಆದರೆ ಕೃಷಿ ಸಚಿವ ಚಲುವ ರಾಯಸ್ವಾಮಿಅವರು ಕೇಂದ್ರಕ್ಕೆ ಈ ಸಂಬಂಧ ಮನವಿ ಮಾಡಿಕೊಂಡಿದ್ದರ ಪರಿಣಾಮ ಈಗ ಇಪ್ಪತ್ತ ಎರಡು ಸಾವಿರ ರೈತರಿಗೆ ಹಣ ಜಮೆ ಮಾಡಲು ಮುಂದಾಗಿದೆ.
ತಾಂತ್ರಿಕ ಕಾರಣಗಳಿಂದ ಪಿಎಂ ಕಿಸಾನ್ ಯೋಜನೆಯ ಹಣ ಹಾಕಿರಲಿಲ್ಲ. ಆದರೆ ಈಗ ಎಲ್ಲರಿಗೂ ಹಣ ಬಿಡುಗಡೆ ಮಾಡಲಾಗುತ್ತಿದೆ. 2025 ರ ಡಿಸೆಂಬರ್ 17 ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಸಚಿವ ಚಲುವರಾಯಸ್ವಾಮಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.ಸುಮಾರು ಮೂವತ್ತು ಸಾವಿರಕ್ಕೂ ಅಧಿಕ ರೈತರಿಗೆ ಹಣ ಬಂದಿಲ್ಲ ಎಂದು ಹೇಳಿದ್ದರು.
ಇದಿಷ್ಟು ಮಾತ್ರವಲ್ಲದೆ ಕಳೆದ ವಾರ ನಡೆದ ಅಂತರಾಷ್ಟ್ರೀಯ ವಾಣಿಜ್ಯ ಮೇಳದಲ್ಲೂ ಸಹ ಕೇಂದ್ರ ಸಚಿವರಿಗೆ ಈ ಬಗ್ಗೆ ನೆನಪಿಸಿದ್ದರು. ಇದಕ್ಕೆ ಸ್ಪಂಧಿಸಿರುವ ಕೇಂದ್ರ 22 ಸಾವಿರಕ್ಕೂ ಹೆಚ್ಚು ಫಲಾನುಭವಿಗಳನ್ನು 22 ನೇ ಕಂತಿನ ಪಾವತಿ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಶೀಘ್ರದಲ್ಲೇ ಅವರಿಗೆ ಹಣ ಬಿಡುಗಡೆಯಾಗಲಿದೆ ಎಂದಿದ್ದಾರೆ.
ಫೆಬ್ರವರಿ ತಿಂಗಳಲ್ಲಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ರೈತರ ಖಾತೆಗಳಿಗೆ ಜಮಾ ಮಾಡುವ ಸಾಧ್ಯತೆಯಿದೆ ಎಂದು ಕೇಳಿಬರುತ್ತಿದೆ. ಪ್ರತಿ ವರ್ಷ, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿಯಲ್ಲಿ ರೈತರ ಖಾತೆಗಳಿಗೆ ತಲಾ 2,000 ರೂ.ಗಳ ಮೂರು ಕಂತುಗಳಲ್ಲಿ ಒಟ್ಟು 6,000 ರೂ.ಗಳನ್ನು ಜಮಾ ಮಾಡುತ್ತದೆ.
ಈ ಹಣವನ್ನು ನೇರವಾಗಿ ಫಲಾನುಭವಿಗಳಿಗೆ ವರ್ಗಾವಣೆ (DBT) ವಿಧಾನದ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ರೈತರು ಈ ಹಣವನ್ನು ಅವರು ಬಯಸಿದಂತೆ ಖರ್ಚು ಮಾಡಬಹುದು. ಈ ಹಣವನ್ನು ಕೃಷಿ ವೆಚ್ಚಗಳಿಗೆ ಅಥವಾ ಬೆಳೆ ಕೃಷಿ ವೆಚ್ಚಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಬಳಸಬಹುದು.
ರೈತರ ಆದಾಯವನ್ನು ಹೆಚ್ಚಿಸಲು ಕೇಂದ್ರದ ಮೋದಿ ಸರ್ಕಾರ ಈ ಯೋಜನೆಯನ್ನು ಲಭ್ಯಗೊಳಿಸಿದೆ. ಇಲ್ಲಿಯವರೆಗೆ, ಪಿಎಂ ಕಿಸಾನ್ ಯೋಜನೆಯಡಿಯಲ್ಲಿ, 2000 ರೂಪಾಯಿಗಳನ್ನು ರೈತರ ಖಾತೆಗಳಿಗೆ 22 ಕಂತುಗಳಲ್ಲಿ ಜಮಾ ಮಾಡಲಾಗಿದೆ, ಇದರಲ್ಲಿ ಪ್ರತಿ ಕಂತು 2000 ರೂಪಾಯಿಗಳು. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿಯಲ್ಲಿ ಒಟ್ಟು 10 ಕೋಟಿ ರೈತರು ಈ ಹಣವನ್ನು ಪಡೆಯುತ್ತಿದ್ದಾರೆ. ಮಹಿಳೆಯರು ಸಹ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಾಗಿರುವುದನ್ನು ಕಾಣಬಹುದು.
Pmkisan 21st instalment-ನನ್ನ ಖಾತೆಗೆ ಪಿಎಂ ಕಿಸಾನ್ 21ನೇ ಕಂತಿನ ಹಣ ಜಮಾ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಮೊದಲು know your status ಮೇಲೆ ಕ್ಲಿಕ್ ಮಾಡಿ

ನಂತರ know your register number ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ

ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 19 ಕಂತುಗಳ ಮಾಹಿತಿ ದೊರೆಯಲಿದೆ.

ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ
ನಂತರ update your details ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ
Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.

ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ
Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.
FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ ಕಾರಣ ಮತ್ತು ಪರಿಹಾರ
|
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
|
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
fruitspmk.gov.in ಪೋರ್ಟಲ್ ನಲ್ಲಿ |
|||
|
1 |
ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ |
ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು |
ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ (NIC) ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ. ಆ) ಸಮಸ್ಯಾತ್ಮಕ ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ. |
|
2 |
ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು |
ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ |
ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ |
|
3 |
ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು |
ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ |
ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ |
|
4 |
ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ |
ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ |
OPERATOR ಲಾಗಿನ್ (RSK, ADA office, JDA office) OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು |
|
5 |
01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ |
ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ |
ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ) |
|
6 |
Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು |
ಜಿಲ್ಲೆಗಳಲ್ಲಿ OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ |
AAO ಲಾಗಿನ್ (RSK, ADA office, JDA office) AAO ಲಾಗಿನ್ನಲ್ಲಿ ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ, ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ |
|
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
|
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
|
pmkisan.gov.in ಪೋರ್ಟಲ್ ನಲ್ಲಿ |
||
|
7 |
ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ |
ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ) |
AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ. |
|
8 |
PFMS rejected |
Aadhaar Number is not seeded in NPCI |
ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ |
|
Bank Name And IFSC Code are not related to each other |
ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ |
||
|
Bank Name is not as per PFMS Bank Master. |
|||
|
Beneficiary is rejected as Account Type is other than SB / SBA / JD |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ) |
||
|
Duplicate Beneficiary Name , Bank Account No and Bank Name not allowed for same scheme |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
|
IFSC Code either not present or currently inactive in tbl BankBranch |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
|
Incorrect Aadhaar Number |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
|
One or more mandatory tags values are missing. |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
||
|
Rejected by Bank, Account No does not exist in Bank/INVALID/CLOSED |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
||
|
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
|
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
|
pmkisan.gov.in ಪೋರ್ಟಲ್ ನಲ್ಲಿ |
||
|
9 |
Amount credited to Account Number-NA |
Aadhaar number based payment by GoI |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ. |
|
10 |
PAYMENT STOPPED BY STATE |
XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ |
ಕೇಂದ್ರ ಸರ್ಕಾರ |
|
11 |
Transaction failed |
ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ. |
|
12 |
ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ |
OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ |
ಕೇಂದ್ರ ಸರ್ಕಾರ |
|
13 |
ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು |
ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ. |
ಕೇಂದ್ರ ಸರ್ಕಾರ ದ pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ. |
ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಖಾರಿಫ್ ಹಂಗಾಮಿನ ಮೆಕ್ಕೆಜೋಳ ಬೆಳೆಗಾರರಿಗಾಗಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯನ್ನು ಜಾರಿಗೆ ತಂದಿದೆ. ದಾಖಲೆ ಪ್ರಮಾಣದ ಉತ್ಪಾದನೆಯಿಂದ ಬೆಲೆ ಕುಸಿತ ಎದುರಿಸುತ್ತಿರುವ ರೈತರಿಗೆ ಪ್ರತಿ ಕ್ವಿಂಟಾಲ್ಗೆ 2,150 ರೂ. ನಿಗದಿತ ದರ ನಿಗದಿಪಡಿಸಲಾಗಿದೆ. ಮಾರುಕಟ್ಟೆ ದರ 1,900 ರೂ.ಗಿಂತ ಕಡಿಮೆಯಾದರೆ 250 ರೂ.ವರೆಗೆ ಬೆಲೆ ವ್ಯತ್ಯಾಸ ಪರಿಹಾರ ಧನ ದೊರೆಯಲಿದೆ. ಈ ಯೋಜನೆಯಿಂದ 10 ಲಕ್ಷಕ್ಕೂ ಹೆಚ್ಚು ರೈತರು ಪ್ರಯೋಜನ ಪಡೆಯಲಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.
ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಖಾರಿಫ್ ಹಂಗಾಮಿನ ಮೆಕ್ಕೆಜೋಳ ಬೆಳೆಗಾರರಿಗೆ ನೆರವಾಗಲು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯನ್ನು ಜಾರಿಗೊಳಿಸಿದೆ. ರಾಜ್ಯದಲ್ಲಿ ಈ ಬಾರಿ ದಾಖಲೆ ಪ್ರಮಾಣದ ಮೆಕ್ಕೆಜೋಳ ಉತ್ಪಾದನೆಯಾಗಿದ್ದು, ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರಿಗೆ ಈ ಯೋಜನೆ ಆಸರೆಯಾಗಲಿದೆ. ಈ ಯೋಜನೆಯಿಂದ ರಾಜ್ಯದಲ್ಲಿನ 10 ಲಕ್ಷಕ್ಕೂ ಹೆಚ್ಚಿನ ಮೆಕ್ಕೆಜೋಳ ಬೆಳೆಗಾರರಿಗೆ ಅನುಕೂಲವಾಗಲಿದೆ. ರಾಜ್ಯದ ಮೆಕ್ಕೆಜೋಳ ಬೆಳೆಗಾರರು ಎದುರಿಸುತ್ತಿರುವ 'ಬೆಲೆ ಕುಸಿತ' ಮತ್ತು 'ಸಂಕಷ್ಟದ ಮಾರಾಟ'ವನ್ನು ತಡೆಯಲು ಸರ್ಕಾರವು ಪ್ರತಿ ಕ್ವಿಂಟಾಲ್ಗೆ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆಯನ್ನು ನಿಗದಿಪಡಿಸಿದೆ.
ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಖಾರಿಫ್ ಹಂಗಾಮಿನ ಮೆಕ್ಕೆಜೋಳ ಬೆಳೆಗಾರರಿಗೆ ನೆರವಾಗಲು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ ಜಾರಿಗೆ ತಂದಿದ್ದು, ಪ್ರತಿ ಕ್ವಿಂಟಾಲ್ಗೆ 2,150 ರೂ. ನಿಗದಿತ ದರ ನಿಗದಿಪಡಿಸಿದೆ. ಮಾರುಕಟ್ಟೆ ದರವು 1,900 ರೂ. ಅಥವಾ ಅದಕ್ಕಿಂತ ಕಡಿಮೆಯಾದಲ್ಲಿ ರೈತರಿಗೆ ಪ್ರತಿ ಕ್ವಿಂಟಾಲ್ಗೆ 250 ರೂ.ವರೆಗೆ ಬೆಲೆ ವ್ಯತ್ಯಾಸದ ಪರಿಹಾರ ಧನ ದೊರೆಯಲಿದೆ. ಮಾರುಕಟ್ಟೆ ಬೆಲೆ ಏರಿಕೆಯಾದಂತೆ ಈ ಪರಿಹಾರದ ಮೊತ್ತವು ಕಡಿಮೆಯಾಗುತ್ತಾ ಹೋಗುತ್ತದೆ ಮತ್ತು ನಿಗದಿತ ಬೆಲೆಯನ್ನು ತಲುಪಿದಾಗ ಸ್ಥಗಿತಗೊಳ್ಳುತ್ತದೆ. ಆದರೆ ರಾಜ್ಯದ ಸಾಮಾನ್ಯ ಸಂಗ್ರಹಣೆ ಯೋಜನೆಯಡಿ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್ಗೆ 2,400 ರೂ.ಕನಿಷ್ಠ ಬೆಂಬಲ ಬೆಲೆ ಲಭ್ಯವಿರುತ್ತದೆ. ಈ ಯೋಜನೆಯು ನಿಯೋಜಿತ ಎಪಿಎಂಸಿ ಮತ್ತು ಉಪ-ಮಾರುಕಟ್ಟೆ ಯಾರ್ಡ್ಗಳಲ್ಲಿ ಏಕೀಕೃತ ಮಾರುಕಟ್ಟೆ ವೇದಿಕೆ ಮೂಲಕ ಮಾರಾಟವಾಗುವ ಗರಿಷ್ಠ ನಾಲ್ಕು ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಒಳಗೊಳ್ಳಲಿದ್ದು, ಪ್ರತಿ ರೈತರಿಗೆ ಗರಿಷ್ಠ 50 ಕ್ವಿಂಟಾಲ್ ಅಥವಾ ಪ್ರತಿ ಎಕರೆಗೆ ಗರಿಷ್ಠ 12 ಕ್ವಿಂಟಾಲ್ ಮಿತಿಯವರೆಗೆ ಮಾತ್ರ ಸೌಲಭ್ಯ ಸಿಗಲಿದೆ. ಕಡ್ಡಾಯ ಗುಣಮಟ್ಟದ ತಪಾಸಣೆ ಮತ್ತು ದಾಖಲೆಗಳ ಪರಿಶೀಲನೆಯ ನಂತರ ಪರಿಹಾರದ ಮೊತ್ತವನ್ನು ನೇರ ನಗದು ವರ್ಗಾವಣೆ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.
ಜಿಲ್ಲಾಧಿಕಾರಿಗಳು ಈ ಯೋಜನೆಯ ಸಂಪೂರ್ಣ ಉಸ್ತುವಾರಿ ವಹಿಸಲಿದ್ದು, ಮಾರುಕಟ್ಟೆಗೆ ಬರುವ ಮೆಕ್ಕೆಜೋಳದ ದೈನಂದಿನ ವರದಿ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುತ್ತಾರೆ. ಏಕೀಕೃತ ಮಾರುಕಟ್ಟೆ ವೇದಿಕೆಯಲ್ಲಿ ಮೊದಲ ವಹಿವಾಟು ನಡೆದ ದಿನದಿಂದ ಒಂದು ತಿಂಗಳ ಕಾಲ ಈ ಯೋಜನೆ ಚಾಲ್ತಿಯಲ್ಲಿರುತ್ತದೆ. ಯೋಜನೆ ಮುಗಿದ ಎರಡು ತಿಂಗಳೊಳಗೆ ಸಮಗ್ರ ಲೆಕ್ಕಪರಿಶೋಧನೆ ನಡೆಸಲಾಗುವುದು.
Maize DBT-ಮೆಕ್ಕೆಜೋಳ ಬೆಳೆಗಾರರಿಗೆ 250 ರೂಪಾಯಿ ಆರ್ಥಿಕ ನೆರವು ಜಮಾ ಪ್ರಾರಂಭ,ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಮೆಕ್ಕೆಜೋಳ ಬೆಳೆಗಾರರಿಗೆ ಆರ್ಥಿಕ ನೆರವು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಯಾವ ಯೋಜನೆಯಡಿ ಎಷ್ಟು ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
Hi
ಚಿತ್ರದುರ್ಗ (Chitradurga) ಜಿಲ್ಲೆಯ ರೈತರು 2025ರ ಖರೀಫ್ ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿಗೊಳಗಾಗಿದ್ದರು. ಈ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ (Pradhan Mantri Fasal Bima Yojana) ಅಡಿಯಲ್ಲಿ ಸುಮಾರು 7,880 ರೈತರಿಗೆ ಒಟ್ಟು 12.40 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು (Crop Insurance Compensation) ಬಿಡುಗಡೆ ಮಾಡಲಾಗಿದೆ.
ಸಂಸದ ಗೋವಿಂದ ಕಾರಜೋಳ (Govinda Karajola) ಅವರು ಲೋಕಸಭೆಯಲ್ಲಿ ಕೇಳಿದ ಚುಕ್ಕೆರಹಿತ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವ ಆರ್.ಎನ್.ಕೆ. ಠಾಕೂರ್ ಅವರು ಲಿಖಿತ ಉತ್ತರ ನೀಡಿದ್ದಾರೆ. ಈ ಉತ್ತರದಲ್ಲಿ 2016ರಿಂದ ಕರ್ನಾಟಕದಲ್ಲಿ ಯಶಸ್ವಿಯಾಗಿ ಜಾರಿಯಲ್ಲಿದ್ದು, ಇದುವರೆಗೆ ರಾಜ್ಯದ 1.34 ಕೋಟಿ ಅರ್ಜಿಗಳಿಗೆ ಒಟ್ಟು 18,783 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು ರೈತರಿಗೆ ಪಾವತಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಬಿಡುಗಡೆಯಾದ 12.40 ಕೋಟಿ ರೂ. ಪರಿಹಾರವು ಸಂಕಷ್ಟದಲ್ಲಿರುವ ರೈತ ಕುಟುಂಬಗಳಿಗೆ ಮಹತ್ವದ ಆರ್ಥಿಕ ನೆರವಾಗಿದ್ದು, ಅವರ ಜೀವನೋಪಾಯಕ್ಕೆ ಹೊಸ ಭರವಸೆ ನೀಡಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.
ಅದೇ ರೀತಿ ನಿಮ್ಮ ಜಿಲ್ಲೆಯಲ್ಲಿ ನಿಮಗೇಷ್ಟು ಬೆಳೆವಿಮೆ ಜಮಾ ಆಗಿದೆ ಚೆಕ್ ಮಾಡಿ
ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2025-26" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

]]>
ರಾಜ್ಯದ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹ ನೀಡಲು ಲ್ಯಾಪ್ಟಾಪ್ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿದ್ದ ಕರ್ನಾಟಕ ಸರ್ಕಾರವು ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರೋತ್ಸಾಹದಾಯಕ ಕ್ರಮಗಳಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ಪ್ರತಿ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಲ್ಯಾಪ್ಟಾಪ್ ಬದಲಿಗೆ ಈಗ ನೇರವಾಗಿ 50,000 ರೂ. ನಗದು ಬಹುಮಾನ ನೀಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಯಲ್ಲಿ ಆಗಿರುವ ಬದಲಾವಣೆಗಳು ಏನು? ಈ ಯೋಜನೆಗೆ ಯಾರೆಲ್ಲಾ ಅರ್ಹರು? ಇತ್ಯಾದಿ ಮಾಹಿತಿಗಳು ಇಲ್ಲಿವೆ.

ಕರ್ನಾಟಕ ಸರ್ಕಾರವು ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಲು ಮತ್ತು ತಂತ್ರಜ್ಞಾನದ ಅರಿವು ಮೂಡಿಸಲು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲಾ ಹಾಗೂ ಬ್ಲಾಕ್ ಮಟ್ಟದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ತಲಾ ಮೂವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸುವ ಮಹತ್ತರ ಯೋಜನೆಯನ್ನು ಜಾರಿಗೆ ತಂದಿತ್ತು. ಕರ್ನಾಟಕ ಸರ್ಕಾರವು ಸರ್ಕಾರಿ ಶಾಲಾ ಎಸ್ಎಸ್ಎಲ್ಸಿ ಟಾಪರ್ಗಳಿಗೆ ನೀಡುತ್ತಿದ್ದ ಪ್ರೋತ್ಸಾಹಕ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ಈ ಹಿಂದೆ ನೀಡಲಾಗುತ್ತಿದ್ದ ಲ್ಯಾಪ್ಟಾಪ್ಗಳ ಬದಲಿಗೆ ಈಗ 50,000 ರೂ. ನಗದು ಬಹುಮಾನವನ್ನು ನೀಡಲು ನಿರ್ಧರಿಸಿದೆ. ಈ ಹೊಸ ನಿಯಮದಂತೆ, ಪ್ರತಿ ಶೈಕ್ಷಣಿಕ ಜಿಲ್ಲೆಯ ಮೊದಲ ಮೂರು ಸ್ಥಾನ ಪಡೆದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ಹಣವನ್ನು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಲ್ಯಾಪ್ಟಾಪ್ಗಳ ಖರೀದಿ ಮತ್ತು ವಿತರಣೆಯಲ್ಲಿನ ವಿಳಂಬ ಹಾಗೂ ತಾಂತ್ರಿಕ ಸವಾಲುಗಳನ್ನು ನಿವಾರಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳು ಈ ಹಣವನ್ನು ತಮ್ಮ ಇಚ್ಛೆಯಂತೆ ಮುಂದಿನ ಶಿಕ್ಷಣದ ಶುಲ್ಕ, ಪುಸ್ತಕಗಳು ಅಥವಾ ಅವರಿಗೆ ಬೇಕಾದ ಕಂಪನಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ಖರೀದಿಸಲು ಬಳಸುವ ಮೂಲಕ ಹೆಚ್ಚಿನ ಶೈಕ್ಷಣಿಕ ಸ್ವಾತಂತ್ರ್ಯವನ್ನು ಪಡೆಯಲಿದ್ದಾರೆ. ಈ ಸಬಂಧ ಜ.22 ರಂದು ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಅರ್ಹ ಫಲಾನುಭವಿಗಳನ್ನು ಶಿಕ್ಷಣ ಇಲಾಖೆಯ ಕಛೇರಿಯಿಂದಲೇ ನೇರವಾಗಿ ಗುರುತಿಸಲಾಗುತ್ತದೆ. ಹೀಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆಯಾ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ಸೌಲಭ್ಯವನ್ನು ವಿತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದರೊಂದಿಗೆ, ಪ್ರತಿಭಾವಂತ ವಿದ್ಯಾರ್ಥಿಗಳು ಈ ಸೌಲಭ್ಯಕ್ಕಾಗಿ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿಯೂ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಸರ್ಕಾರವು ಈ ಯೋಜನೆಗಾಗಿ ಪ್ರತ್ಯೇಕ ಆನ್ಲೈನ್ ಅರ್ಜಿ ನಮೂನೆಯನ್ನು ತನ್ನ ಅಧಿಕೃತ ವೆಬ್ಸೈಟ್ dce.karnataka.gov.in ನಲ್ಲಿ ಲಭ್ಯವಾಗುವಂತೆ ಮಾಡಿದೆ. ಉನ್ನತ ಶಿಕ್ಷಣದ ಉದ್ದೇಶಕ್ಕಾಗಿ ಈ ಸೌಲಭ್ಯವನ್ನು ಬಯಸುವ ಯಾವುದೇ ಅರ್ಹ ವಿದ್ಯಾರ್ಥಿಯು ಈ ಜಾಲತಾಣದ ಮೂಲಕ ಸುಲಭವಾಗಿ ನೋಂದಾಯಿಸಿಕೊಳ್ಳಬಹುದು.
]]>ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್, ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 24 ಕಂತಿನ ಹಣ ಬಿಡುಗಡೆ ಮಾಡಲಾಗಿದೆ
ಇದೀಗ ಮತ್ತೆ ಎರಡು ಕಂತು ಹಣ ಬಿಡುಗಡೆ ಮಾಡುತ್ತಿದ್ದೇವೆ ಈ ಮೂಲಕ ಗೃಹಲಕ್ಷ್ಮಿಯೋಜನೆಯಡಿ ಒಟ್ಟು 26 ಕಂತಿನಲ್ಲಿ 52 ಸಾವಿರ ರೂಪಾಯಿ ಫಲಾನುಭವಿಗಳಿಗೆ ನೀಡಿದಂತಾಗುತ್ತದೆ ಎಂದು ತಿಳಿಸಿದ್ದಾರೆ.
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನ ಪಟ್ಟಿಯಲ್ಲಿರುವ(Gruhalakshmi list)ಅರ್ಹ ಗೃಹಿಣಿಯರಿಗೆ ಮಾತ್ರ ಗೃಹಲಕ್ಷ್ಮಿ ಹಣ(Gruhalakshmi amount) ಜಮಾ(dbt) ಆಗಲಿದೆ.

Gruhalakshmi status-ಗೃಹಲಕ್ಷ್ಮಿ ಇಲ್ಲಿಯವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.

ಸಾಮಾಜಿಕ ಹಾಗೂ ಸಾಂಸ್ಕೃತಿಕ ಏಳಿಗೆಗಾಗಿ ಕರ್ನಾಟಕ ಸರ್ಕಾರವು ಒಂದು ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಶುಭ ಸಮಾರಂಭಗಳು, ಸಭೆಗಳು ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸಲು ಸುಸಜ್ಜಿತ ಕಟ್ಟಡಗಳ ಕೊರತೆಯನ್ನು ನೀಗಿಸಲು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆರ್ಥಿಕ ನೆರವು ನೀಡಲಾಗುತ್ತಿದೆ. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರ ಹೆಸರಿನಲ್ಲಿ ಈ ಭವನಗಳನ್ನು ನಿರ್ಮಿಸಲು ಅವಕಾಶವಿದೆ. ಇದು ಸಮುದಾಯದ ಏಳಿಗೆಯ ಜೊತೆಗೆ ಗ್ರಾಮೀಣ ಭಾಗದ ಹಲವು ಅಗತ್ಯತೆಗಳನ್ನು ಪೂರೈಸುತ್ತದೆ. ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ಏನು? ಅರ್ಜಿ ಸಲ್ಲಿಸುವುದು ಹೇಗೆ ಇತ್ಯಾದಿ ಮಾಹಿತಿಗಳನ್ನು ತಿಳಿಯೋಣ.
ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಈ ಯೋಜನೆಯು ಮುಖ್ಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಗತ್ಯಗಳನ್ನು ಪೂರೈಸಲು ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಡಾ. ಬಿ.ಆರ್. ಅಂಬೇಡ್ಕರ್ ಅಥವಾ ಡಾ. ಬಾಬು ಜಗಜೀವನ್ ರಾಮ್ ಅವರ ಹೆಸರಿನಲ್ಲಿ ಸಮುದಾಯ ಭವನಗಳನ್ನು ನಿರ್ಮಿಸಲು 20 ಲಕ್ಷ ರೂ.ದಿಂದ 4 ಕೋಟಿ ರೂ.ವರೆಗೆ ಬೃಹತ್ ಮೊತ್ತದ ಆರ್ಥಿಕ ಸಹಾಯಧನವನ್ನು ನೀಡಲಾಗುತ್ತದೆ. ನೋಂದಾಯಿತ ಸಂಸ್ಥೆಗಳು ತಮ್ಮ ಸ್ವಂತ ಜಾಗ ಅಥವಾ ಸರ್ಕಾರಿ ಮಂಜೂರಾದ ಜಾಗದಲ್ಲಿ ಈ ಭವನಗಳನ್ನು ನಿರ್ಮಿಸಿಕೊಳ್ಳಲು ಅವಕಾಶವಿದ್ದು, ಇದರಿಂದ ಬಡ ವರ್ಗದ ಜನರು ಮದುವೆ, ಸಭೆ-ಸಮಾರಂಭಗಳನ್ನು ಅತ್ಯಂತ ಕಡಿಮೆ ದರದಲ್ಲಿ ಅಥವಾ ಉಚಿತವಾಗಿ ನಡೆಸಲು ಸಾಧ್ಯವಾಗುತ್ತದೆ. ಆ ಮೂಲಕ ಖಾಸಗಿ ಕಲ್ಯಾಣ ಮಂಟಪಗಳ ದುಬಾರಿ ವೆಚ್ಚದಿಂದ ಮುಕ್ತಿ ಪಡೆಯಬಹುದು.

ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಖಾಸಗಿ ಕಲ್ಯಾಣ ಮಂಟಪಗಳ ದುಬಾರಿ ಬಾಡಿಗೆಯನ್ನು ಭರಿಸುವುದು ಕಷ್ಟಕರವಾಗಿದೆ. ಈ ಸಮಸ್ಯೆಗೆ ಪರಿಹಾರವಾಗಿ, ಸರ್ಕಾರವು ಸ್ಥಳೀಯ ಮಟ್ಟದಲ್ಲಿ ಸಮುದಾಯ ಭವನಗಳನ್ನು ನಿರ್ಮಿಸಿ, ಅತ್ಯಂತ ಕಡಿಮೆ ದರದಲ್ಲಿ ಅಥವಾ ಉಚಿತವಾಗಿ ಸಾರ್ವಜನಿಕ ಬಳಕೆಗೆ ಒದಗಿಸುವ ಉದ್ದೇಶವನ್ನು ಹೊಂದಿದೆ.
ಈ ಯೋಜನೆಯ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ಅಥವಾ ಗೊಂದಲಗಳಿದ್ದಲ್ಲಿ ರಾಜ್ಯ ಸರ್ಕಾರದ 24x7 ಸಹಾಯವಾಣಿ: 94823 00400 ಅಥವಾ ನಿಮ್ಮ ಹತ್ತಿರದ ತಾಲ್ಲೂಕು/ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಿ.
]]>
ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಯ ವಿಧವೆಯರ ಪುನರ್ವಿವಾಹಕ್ಕೆ 3 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡುತ್ತಿದೆ. ಈ ಯೋಜನೆಯು ಮಹಿಳೆಯರಿಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಒದಗಿಸುವ ಗುರಿ ಹೊಂದಿದೆ. ಮದುವೆಯಾದ ಒಂದು ವರ್ಷದೊಳಗೆ ಅರ್ಜಿ ಸಲ್ಲಿಸಬೇಕು. ಯಾವುದೇ ಆದಾಯ ಮಿತಿ ಇಲ್ಲ. ಅರ್ಹತೆ ಮತ್ತು ಅಗತ್ಯ ದಾಖಲೆಗಳ ವಿವರಗಳನ್ನು ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಲಭ್ಯವಿದೆ.
ಇಂದಿನ ಸಮಾಜ ಎಷ್ಟೇ ಮುಂದುವರಿದಿದ್ದರೂ ಪತಿಯನ್ನು ಕಳೆದುಕೊಂಡ ಮಹಿಳೆಯರನ್ನು ನೋಡುವ ರೀತಿಯೇ ಬೇರೆ. ಅವರಿಗೆ ಇಂದಿಗೂ ಸಮಾನ ಗೌರವಗಳು ಸಿಗುತ್ತಿಲ್ಲ. ಚಿಕ್ಕ ವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡವರಿಗೆ ಮರು ವಿವಾಹ ಆಗವ ಅವಕಾಶಗಳು ಸಿಗುವುದು ಕಡಿಮೆ. ಹೀಗಾಗಿ ವಿಧವೆಯರ ಮರು ವಿವಾಹಕ್ಕೆ ಸರ್ಕಾರವೇ ಸಂಪೂರ್ಣ ಆರ್ಥಿಕ ಖರ್ಚು ವೆಚ್ಚಗಳನ್ನು ಭರಸುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿಯ ವಿಧವೆಯರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಒಂದು ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಪತಿಯನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಮಹಿಳೆಯರು ಹೊಸ ಬದುಕನ್ನು ಕಟ್ಟಿಕೊಳ್ಳಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ವಿಧವಾ ಮರು ವಿವಾಹ ಪ್ರೋತ್ಸಾಹಧನ ಯೋಜನೆ? ಈ ಯೋಜನೆಯಡಿ ದೊರೆಯುವ ಆರ್ಥಿಕ ನೆರವು ಎಷ್ಟು? ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.
ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿಯ ವಿಧವೆಯರ ಮರುಬಾಳಿಗೆ ಆಸರೆಯಾಗಲು 3 ಲಕ್ಷ ರೂಪಾಯಿಗಳ ಆರ್ಥಿಕ ಪ್ರೋತ್ಸಾಹಧನ ಯೋಜನೆಯನ್ನು ಜಾರಿಗೆ ತಂದಿದೆ. ಸಾಮಾಜಿಕ ಬದಲಾವಣೆ ಮತ್ತು ವಿಧವೆಯರ ಪುನರ್ವಸತಿಯನ್ನು ಮುಖ್ಯ ಉದ್ದೇಶವಾಗಿಟ್ಟುಕೊಂಡಿರುವ ಈ ಯೋಜನೆಗೆ ಯಾವುದೇ ಆದಾಯದ ಮಿತಿ ಇರುವುದಿಲ್ಲ. ಪರಿಶಿಷ್ಟ ಜಾತಿಗೆ ಸೇರಿದ ವಿಧವೆಯು ಯಾವುದೇ ಧರ್ಮ ಅಥವಾ ಜಾತಿಯ ಪುರುಷನನ್ನು ಮರು ವಿವಾಹವಾದಲ್ಲಿ ಈ ಸೌಲಭ್ಯಕ್ಕೆ ಅರ್ಹರಾಗಿದ್ದು, ಮದುವೆಯಾದ ಒಂದು ವರ್ಷದ ಒಳಗಾಗಿ ಅಧಿಕೃತ ಜಾಲತಾಣದ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಈಗಾಗಲೇ ಸರಳ ವಿವಾಹ ಯೋಜನೆಯಡಿ ಸೌಲಭ್ಯ ಪಡೆದಿದ್ದಲ್ಲಿ 2.50 ಲಕ್ಷ ರೂಪಾಯಿಗಳ ಪ್ರೋತ್ಸಾಹಧನ ಲಭ್ಯವಿರುತ್ತದೆ.

ಕರ್ನಾಟಕದ ಲಕ್ಷಾಂತರ ರೈತರ ದಶಕಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ತೆಂಗು ರಾಜ್ಯದ ಪ್ರಮುಖ ಬೆಳೆಯಾಗಿದ್ದರೂ ವಿಮಾ ವ್ಯಾಪ್ತಿಗೆ ಒಳಪಟ್ಟಿರಲಿಲ್ಲ. ತೆಂಗಿಗೆ ಭಾದಿಸುತ್ತಿರುವ ರೋಗಳು ಹಾಗೂ ಬರಗಾಲದಿಂದಾಗಿ ತೆಂಗು ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ. ಹೀಗಾಗಿ ಅಡಿಕೆ ಮತ್ತು ಕಾಳುಮೆಣಸಿನಂತೆಯೇ ತೆಂಗು ಬೆಳೆಯನ್ನೂ 'ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ'ಯಡಿ ತರಲು ತೋಟಗಾರಿಕಾ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತಾದ ಪ್ರಸ್ತಾವನೆಯು ಸರ್ಕಾರದ ಅಂತಿಮ ಅನುಮೋದನೆಯ ಹಂತದಲ್ಲಿದ್ದು, ಜೂನ್ ತಿಂಗಳಿನಿಂದ ಜಾರಿಗೆ ಬರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಏನಿದು ತೆಂಗು ವಿಮೆ ಯೋಜನೆ? ರೈತರಿಗೆ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.
ತೆಂಗು ಬೆಳೆ ವಿಮಾ ಯೋಜನೆಯು ಪ್ರಕೃತಿ ವಿಕೋಪ, ಕೀಟಬಾಧೆ ಅಥವಾ ಹವಾಮಾನ ಏರುಪೇರಿನಿಂದ ನಷ್ಟ ಅನುಭವಿಸುವ ತೆಂಗು ಬೆಳೆಗಾರರಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶ ಹೊಂದಿರುವ ಯೋಜನೆಯಾಗಿದೆ. ಈ ಯೋಜನೆಯಡಿ ಪ್ರತಿ ಹೆಕ್ಟೇರ್ಗೆ 65,000 ರೂ. ವಿಮಾ ಮೊತ್ತವನ್ನು ನಿಗದಿಪಡಿಸಲಾಗಿದ್ದು, ರೈತರು ಇದರ ಕೇವಲ 5% (ಅಂದಾಜು 3,250 ರೂ.) ಪ್ರೀಮಿಯಂ ಮೊತ್ತವನ್ನು ಪಾವತಿಸುವ ಮೂಲಕ ನೋಂದಾಯಿಸಿಕೊಳ್ಳಬಹುದು. ಬರಗಾಲ, ಅನಿರೀಕ್ಷಿತ ಮಳೆ ಅಥವಾ ರೋಗಬಾಧೆಯಿಂದ ಇಳುವರಿ ಕಡಿಮೆಯಾದಲ್ಲಿ, ಹೋಬಳಿ ಮಟ್ಟದ ಹವಾಮಾನ ದತ್ತಾಂಶಗಳನ್ನು ಆಧರಿಸಿ ವಿಮಾ ಕಂಪನಿಗಳು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಪರಿಹಾರ ಮೊತ್ತವನ್ನು ಪಾವತಿಸುತ್ತವೆ. ಈ ಯೋಜನೆಯು ಪ್ರಸ್ತುತ ಸರ್ಕಾರದ ಅಂತಿಮ ಅನುಮೋದನೆಯ ಹಂತದಲ್ಲಿದ್ದು, ಮುಂಬರುವ ಜೂನ್ ತಿಂಗಳಿನಿಂದ ಜಾರಿಗೆ ಬರುವ ನಿರೀಕ್ಷೆಯಿದೆ.

ತೆಂಗಿನ ಮರ ಏರುವ ಕಾರ್ಮಿಕರ ಜೀವಕ್ಕೆ ರಕ್ಷಣೆ ನೀಡಲು ಕೇಂದ್ರ ಸರ್ಕಾರವು 'ಕೇರಾ' ಸುರಕ್ಷಾ ವಿಮಾ ಯೋಜನೆಯನ್ನು ಜಾರಿಗೆ ತಂದಿದೆ. ತೆಂಗು ಅಭಿವೃದ್ಧಿ ಮಂಡಳಿ ಮತ್ತು ದಿ ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿಯ ಸಹಯೋಗದಲ್ಲಿ ಇದು ಕಾರ್ಯನಿರ್ವಹಿಸುತ್ತದೆ.
ವಿಶ್ವದ ಒಟ್ಟು ತೆಂಗು ಉತ್ಪಾದನೆಯಲ್ಲಿ ಇಂಡೋನೇಷ್ಯಾ ಮತ್ತು ಫಿಲಿಪೈನ್ಸ್ ರಾಷ್ಟ್ರಗಳ ಜೊತೆಗೂಡಿ ಭಾರತವು ಶೇ. 73 ರಷ್ಟು ದೊಡ್ಡ ಪಾಲನ್ನು ಹೊಂದಿದ್ದರೂ ಸಹ, ಇಲ್ಲಿನ ಬೆಳೆಗಾರರು ನಿರಂತರವಾಗಿ ಹಲವು ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಮುಖ್ಯವಾಗಿ ಕಪ್ಪು ತಲೆ ಕೀಟ ಮತ್ತು ನುಸಿ ರೋಗದಂತಹ ಭೀಕರ ರೋಗಬಾಧೆಗಳಿಂದ ಇಳುವರಿ ಗಣನೀಯವಾಗಿ ಕುಸಿಯುತ್ತಿದ್ದರೆ, ಮತ್ತೊಂದೆಡೆ ತೀವ್ರ ಬರಗಾಲ ಅಥವಾ ಅತಿಯಾದ ಮಳೆಯಂತಹ ಹವಾಮಾನ ವೈಪರೀತ್ಯಗಳಿಂದ ತೆಂಗಿನ ಮರಗಳು ಒಣಗಿ ರೈತರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಇದರ ಜೊತೆಗೆ, ತೆಂಗಿನ ಮರ ಏರುವಾಗ ಸಂಭವಿಸಬಹುದಾದ ಆಕಸ್ಮಿಕ ಅಪಘಾತಗಳ ಭೀತಿಯು ಕಾರ್ಮಿಕರ ಮತ್ತು ಅವರ ಕುಟುಂಬಗಳ ಜೀವನವನ್ನು ಅತಂತ್ರ ಸ್ಥಿತಿಗೆ ತಳ್ಳುತ್ತಿದ್ದು, ಇಂತಹ ಸವಾಲುಗಳನ್ನು ಎದುರಿಸಲು ಈಗ ಸರ್ಕಾರ ಜಾರಿಗೆ ತರುತ್ತಿರುವ ವಿಮಾ ಯೋಜನೆಗಳು ಅತ್ಯಗತ್ಯವಾಗಿವೆ.
ಹೆಚ್ಚಿನ ಮಾಹಿತಿಗಾಗಿ ಅಥವಾ ಗೊಂದಲಗಳಿದ್ದಲ್ಲಿ ತೋಟಗಾರಿಕಾ ಇಲಾಖೆಯ ಜಿಲ್ಲಾ ಅಥವಾ ತಾಲ್ಲೂಕು ಮಟ್ಟದ ಉಪ ನಿರ್ದೇಶಕರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2022-23 ರಿಂದ 2024-25ನೇ ಸಾಲಿನವರೆಗೆ ಒಟ್ಟು 13,728 ರೈತರು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೊಂದಾಯಿಸಿಕೊಂಡಿದ್ದಾರೆ. ಈ ಪೈಕಿ 945 ರೈತರಿಗೆ ವಿವಿಧ ಕಾರಣಗಳಿಂದ ಬೆಳೆ ವಿಮೆ ಪರಿಹಾರ ಜಮೆಯಾಗಿರುವುದಿಲ್ಲ.
ಸಮಸ್ಯೆಗಳನ್ನು ಪರಿಹರಿಸಿ ಸರ್ಕಾರ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಬುಧವಾರ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಬೆಳೆವಿಮೆ ಪರಿಹಾರ ಬಾಕಿ ಇರುವ 945 ರೈತರ ಪೈಕಿ ಎನ್.ಪಿ.ಸಿ.ಐ ಸೀಡಿಂಗ್, ಆಧಾರ್ ಕಾರ್ಡ್ ನಿಷ್ಕ್ರೀಯತೆ, ಅಮಾನ್ಯವಾದ ಬ್ಯಾಂಕ್ ಖಾತೆ ಸೇರಿದಂತೆ ತಾಂತ್ರಿಕ ಕಾರಣಗಳಿಂದಾಗಿ ಒಟ್ಟು 133 ರೈತರಿಗೆ ರೂ.40.09 ಲಕ್ಷ ಪರಿಹಾರ ಹಣ ಜಮೆಯಾಗದೆ ಹಿಂದಿರುಗಿದೆ.
ಬೆಳೆ ಕಟಾವು ಇಳುವರಿ ಪ್ರಯೋಗ ವ್ಯತ್ಯಾಸದ ಹಿನ್ನಲೆಯಲ್ಲಿ 798 ಬೆಳೆ ಹೊಂದಾಣಿಕೆಯಾಗದೇ ಹಾಗೂ ಮಾರ್ಗಸೂಚಿಯನುಸಾರ ಬೆಳೆ ಕಟಾವು ಪ್ರಯೋಗಗಳ ಇಳುವರಿ ಲಭ್ಯವಿಲ್ಲದ ಕಾರಣ 14 ರೈತರಿಗೆ ಪರಿಹಾರ ಪಾವತಿ ಬಾಕಿಯಿದೆ. 2025-26ರ ಮುಂಗಾರು ಹಂಗಾಮಿನಲ್ಲಿ ಮಿಮೆ ಮಾಡಿಸುವ ರೈತರ ಸಂಖ್ಯೆ ಹೆಚ್ಚಾಗಿದ್ದು, ಕಲಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 10,054 ರೈತರು ನೋಂದಾಯಿಸಿಕೊಂಡಿದ್ದಾರೆ. ಮಧ್ಯಂತರ ಬೆಳೆ ವಿಮೆ ನಷ್ಟ ಪರಿಹಾರದಡಿ ಒಟ್ಟು 9861 ರೈತರಿಗೆ ರೂ.906.32 ಲಕ್ಷಗಳ ಬೆಳೆ ವಿಮೆ ಪರಿಹಾರ ಲೆಕ್ಕಾಚಾರ ಮಾಡಲಾಗಿದ್ದು, ವಿಮಾ ಸಂಸ್ಥೆಯವರಿಂದ ಪರಿಹಾರ ಇತ್ಯರ್ಥ ಪ್ರಕ್ರಿಯೆಯಲ್ಲಿದೆ.
ಕಲಬುರಗಿ ಜಿಲ್ಲೆಗೆ ಮಧ್ಯಂತರ ಬೆಳೆ ವಿಮೆ ನಷ್ಟ ಪರಿಹಾರದಡಿ ರೂ.990 ಕೋಟಿ ಪರಿಹಾರವನ್ನು ನೀಡಲಾಗಿದೆ. ರಾಜ್ಯದ ಎಲ್ಲಾ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ರೈತರಿಗೆ ಬೆಳೆಮಿಮೆ ನೊಂದಣಿಗೆ ಪ್ರೋತ್ಸಾಹಿಸಬೇಕು. ಇದರಿಂದ ರೈತರಿಗೆ ಯಾವುದೇ ನಷ್ಟವಿಲ್ಲ. ವಿಮೆ ಮೊತ್ತ ಶೇ.2 ರಷ್ಟು ಮಾತ್ರ ರೈತರು ಪಾವತಿಸಬೇಕು. ಉಳಿದ ಬೆಳೆ ವಿಮೆ ಮೊತ್ತವನ್ನು ಸರ್ಕಾರ ಪಾವತಿಸುತ್ತದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರ ನೋಂದಣಿಯಿಂದ ಪ್ರಾರಂಭವಾಗಿ ಪರಿಹಾರ ವಿತರಣೆಯವರೆಗೆ ಸಂಪೂರ್ಣ ಪ್ರಕ್ರಿಯೆಯನ್ನು ಸಂರಕ್ಷಣೆ ಪೋರ್ಟಲ್ ಮೂಲಕವೇ ನಿರ್ವಹಿಸಲಾಗುತ್ತದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ವಿಶೇಷವಾಗಿ ಕಪ್ & ಕ್ಯಾಪ್ ಮಾದರಿಯಲ್ಲಿ ವಿಮೆ ಪರಿಹಾರವನ್ನು ನಿರ್ಧರಿಸಲು ಕ್ತಮ ಕೈಕೊಂಡಿರುವುದರಿಂದ ವಿಮೆ ಪರಿಹಾರ ವಿತರಣೆಯಲ್ಲಿ ಸುಧಾರಣೆಯನ್ನು ತರಲಾಗಿದೆ. ಈ ಕುರಿತು ವಿಮಾ ಕಂಪನಿ ಅಧಿಕಾರಿಗಳೊಂದಿಗೆ ಹಲವು ಬಾರಿ ಸಭೆ ನಡೆಸಿರುವುದಲ್ಲದೇ, ಕ್ರಾಪ್ ಕಟಿಂಗ್ ಎಕ್ಸಪರಿಮೇಟ್ ಸರಿಯಾಗಿ ಹಾಗೂ ವೈಜ್ಞಾನಿಕವಾಗಿ ನಡೆಸಬೇಕೆಂದು ಸೂಚನೆ ನೀಡಲಾಗಿದ್ದರ ಪರಿಣಾಮ ರಾಜ್ಯದಲ್ಲಿ ಬೆಳೆ ವಿಮೆ ಯೋಜನೆಯನ್ನು ಅತ್ಯಂತ ಯಶ್ವಸಿಯಾಗಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು..
ಈ ಮೂರು ವರ್ಷಗಳಲ್ಲಿ ಎಲ್ಲಾ ಹಂಗಾಮುಗಳಲ್ಲಿ ರಾಜ್ಯದಲ್ಲಿ ಒಟ್ಟು 73 ಲಕ್ಷ ರೈತರು ವಿಮೆ ಹಣ ಪಾವತಿಸಿ ನೊಂದಾಯಿಸಿಕೊಂಡವರ ಪೈಕಿ ಶೇ ಅಂದಾಜು 60% ರಷ್ಟು ರೈತರು, 43 ಲಕ್ಷ ನೊಂದಾಯಿಸಿಕೊಂಡ ರೈತರಿಗೆ ಒಟ್ಟು 5534 ಕೋಟಿ ರೂಪಾಯಿಗಳ ವಿಮೆ ಪರಹಾರವನ್ನು ನೀಡಿ ರೈತರ ಸಂಕಷ್ಟದ ಸಮಯದಲ್ಲಿ ನಮ್ಮ ಸರ್ಕಾರ ರೈತರಿಗೆ ವಿಮೆ ಪರಿಹಾರ ನೀಡುವಲ್ಲಿ ಇತಿಹಾಸ ನಿರ್ಮಿಸಿದೆ ಎಂದು ಚಲುವರಾಯಸ್ವಾಮಿಯವರು ತಿಳಿಸಿದರು..
ಇನ್ನೂ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ, ಕಲಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2022- 23 ನೇ ಸಾಲಿನಿಂದ 2025-26 ನೇ ಸಾಲಿನ ಮುಂಗಾರು ಹಂಗಾಮಿನವರೆಗೆ ಒಟ್ಟು 23782 ರೈತರು 31338.13 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆ ವಿಮೆಗೆ ನೊಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ 5 ಲಕ್ಷದ 5 ಸಾವಿರ ರೈತರಿಗೆ 990 ಕೋಟಿ ರೂಪಾಯಿ ಬೆಳೆ ವಿಮಾ ಪರಿಹಾರ ಹಣ ನೀಡಲಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು.
ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ನಿಮ್ಮ ಜಮಾ (Belevime hana jama)ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

ಉಳಿದಂತೆ ಬಳ್ಳಾರಿ, ಬೆಂಗಳೂರು ನಗರ- ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಇದಲ್ಲದೆ ಜನವರಿ 27 ರಿಂದ ಜನವರಿ 31 ರವರೆಗೂ ಒಣಹವೆ ಇರಲಿದೆ.
ಬೆಂಗಳೂರು ಹವಾಮಾನ
ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದೆ. ಬೆಳಗ್ಗೆ ಮಂಜು ಕವಿದ ವಾತಾವರಣ ಹಾಗೂ ತೀವ್ರ ಚಳಿ ಇರಲಿದೆ. ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ವಾತಾವರಣ ಇರಲಿದೆ.
ಹವಾಮಾನ ಸ್ಥಿತಿ:
ತಮಿಳುನಾಡು- ಶ್ರೀಲಂಕಾದ ಪಕ್ಕದ ಬಂಗಾಳಕೊಲ್ಲಿಯಲ್ಲಿ ಉಷ್ಣವಲಯ ಹರಡಿದೆ.
ಕರ್ನಾಟಕದ ಒಳನಾಡಲ್ಲಿ ಕನಿಷ್ಠ ತಾಪಮಾನ ಮತ್ತಷ್ಟು ಕುಸಿಯಲಿದೆ. ದಕ್ಷಿಣ ಕರ್ನಾಟಕದಲ್ಲಿ 3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಲಿದೆ. ಆದರೆ ಒಟ್ಟಾರೆ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಸಂಜೆ ರಾತ್ರಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜನವರಿ 26ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
28ರಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಬಹುದು.
ಮಲೆನಾಡು : ರಾಜ್ಯದ ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಜನವರಿ 26ರಂದು ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 28ರಿಂದ ಒಣ ಹವೆ ಮುಂದುವರಿಯಲಿದೆ.
ಉತ್ತರ ಕನ್ನಡ : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಜನವರಿ 26ರಂದು ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ. ಹಾಗೂ ಮೈಸೂರು ಜಿಲ್ಲೆಗಳಲ್ಲಿ ರಾತ್ರಿ ಅಥವಾ ಮುಂಜಾನೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜನವರಿ 26, 27ರಂದು ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯ ಉಷ್ಣ ಮಾರುತ ಪರಿಚಲನೆ ಮುಂದುವರಿದಿದ್ದರ ಪರಿಣಾಮದಿಂದ ತಮಿಳುನಾಡು ಕಡೆಯಿಂದ ತೇವಾಂಶ ಭರಿತ ಗಾಳಿಯು ಬೀಸುತ್ತಿರುವುದರಿಂದ ಈ ಮಳೆಯ ವಾತಾವರಣವು ಸೃಷ್ಟಿಯಾಗಿದೆ. ಜೊತೆಗೆ ಛಳಿಯ ಪ್ರಮಾಣವು ಕಡಿಮೆಯಾಗಿದೆ.
ಉತ್ತರ ಭಾರತದಲ್ಲಿ ಈ ತಿಂಗಳ ಅಂತ್ಯದವರಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
]]>ಕರ್ನಾಟಕ ಸರ್ಕಾರವು ಸಹಕಾರ ಸಂಘಗಳ ಸದಸ್ಯರಿಗಾಗಿ ಜಾರಿಗೆ ತಂದಿರುವ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯು ಗ್ರಾಮೀಣ ಮತ್ತು ನಗರ ಪ್ರದೇಶದ ಸಹಕಾರಿ ಸದಸ್ಯರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಯೋಜನೆಯಾಗಿದೆ. ಯಶಸ್ವಿನಿ ಯೋಜನೆಯು ಸಹಕಾರಿ ಕುಟುಂಬಗಳಿಗೆ ಆಪತ್ಕಾಲದ ಮಿತ್ರನಿದ್ದಂತೆ. ಈ ಯೋಜನೆಯಡಿ 2025-26ನೇ ಸಾಲಿನ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ಮರುಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ಯಶಸ್ವಿನಿ ಆರೋಗ್ಯ ವಿಮೆ ಯೋಜನೆ? ಪ್ರಯೋಜನಗಳೇನು? ನೋಂದಣಿ ಮಾಡುವುದು ಹೇಗೆ? ಇತ್ಯಾದಿ ಮಾಹಿತಿಗಳು ಇಲ್ಲಿವೆ.
ಯಶಸ್ವಿನಿ ಆರೋಗ್ಯ ಯೋಜನೆಯು ಕರ್ನಾಟಕ ಸರ್ಕಾರದ ಒಂದು ಮಹತ್ವಾಕಾಂಕ್ಷೆಯ ನಗದು ರಹಿತ ಚಿಕಿತ್ಸಾ ಯೋಜನೆಯಾಗಿದೆ. ಇದು ರಾಜ್ಯದ ಸಹಕಾರ ಸಂಘಗಳ ಸದಸ್ಯರು ಮತ್ತು ಅವರ ಕುಟುಂಬದವರಿಗೆ ಅಲ್ಪ ಮೊತ್ತದ ವಾರ್ಷಿಕ ವಂತಿಗೆಯೊಂದಿಗೆ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ಒದಗಿಸುತ್ತದೆ. ಈ ಯೋಜನೆಯಡಿ ನೋಂದಾಯಿತ ಫಲಾನುಭವಿಗಳು ರಾಜ್ಯಾದ್ಯಂತ ಇರುವ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ವರ್ಷಕ್ಕೆ ಗರಿಷ್ಠ 5 ಲಕ್ಷ ರೂ.ದವರೆಗೆ ಸುಮಾರು 2,128 ಕ್ಕೂ ಹೆಚ್ಚು ವಿವಿಧ ರೀತಿಯ ಶಸ್ತ್ರಚಿಕಿತ್ಸೆ ಮತ್ತು ICU ಚಿಕಿತ್ಸೆಗಳನ್ನು ಪಡೆಯಬಹುದು. ರಾಜ್ಯದ ಎಲ್ಲಾ ಸಹಕಾರಿಗಳ ಮತ್ತು ರೈತರ ನಿರಂತರ ಒತ್ತಾಯ ಹಾಗೂ ಬೇಡಿಕೆ ಪರಿಗಣಿಸಿ ಈ ಹಿಂದೆ 2018ರಲ್ಲಿ ಸ್ಥಗಿತಗೊಳಿಸಿದ್ದ ಯಶಸ್ವಿನಿ ಯೋಜನೆಯನ್ನು ಪುನರ್ ಜಾರಿಗೊಳಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿ, 2022-23ನೇ ಸಾಲಿನ ಆಯವ್ಯಯದಲ್ಲಿ ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ಘೋಷಣೆ ಮಾಡಿದೆ. ಯೋಜನೆ ಜಾರಿಗಾಗಿ “ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್”ಅನ್ನು ರಚಿಸಿದ್ದು, ಇದಕ್ಕೆ ಮಾನ್ಯ ಮುಖ್ಯಮಂತ್ರಿಗಳು ಮಹಾ ಪೋಷಕರಾಗಿ, ಸಹಕಾರ ಸಚಿವರು ಪೋಷಕರಾಗಿ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಸಹಕಾರ ಇಲಾಖೆ ಇವರು ಟ್ರಸ್ಟ್ನ ಅಧ್ಯಕ್ಷರಾಗಿರುತ್ತಾರೆ.


ಸರ್ಕಾರಿ ನೌಕರರು, ಖಾಸಗಿ ಕಂಪನಿಯಲ್ಲಿ 30,000 ರೂ.ಕ್ಕಿಂತ ಹೆಚ್ಚು ವೇತನ ಪಡೆಯುವವರು ಮತ್ತು ಈಗಾಗಲೇ ಬೇರೆ ಆರೋಗ್ಯ ವಿಮೆ ಹೊಂದಿರುವವರು ಈ ಯೋಜನೆಗೆ ಅರ್ಹರಲ್ಲ.
ಮೊದದೆಲ್ಲಾ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲವಿದೆ ಎಂದು ತಿಳಿಯಲು ಬ್ಯಾಂಕ್ಗಳಿಗೂ ಅಥವಾ ಕಂದಾಯ ಕಚೇರಿಗಳಿಗೂ ಅಲೆಯಬೇಕಿತ್ತು. ಆದರೆ ಈಗ ನಿಮ್ಮ ಕೈಯಲ್ಲಿರುವ ಮೊಬೈಲ್ ಮತ್ತು ಇಂಟರ್ನೆಟ್ ಸೌಲಭ್ಯವಿದ್ದರೆ ಸಾಕು, ಕೇವಲ 2 ನಿಮಿಷದಲ್ಲಿ ನಿಮ್ಮ ಜಮೀನಿನ ವಿವರವನ್ನು ನೀವೇ ನೋಡಬಹುದು.
ನಿಮ್ಮ ಆಸ್ತಿಯ ದಾಖಲೆಗಳು 'ಕ್ಲೀನ್' ಆಗಿದ್ದಾಗ ಮಾತ್ರ ನೆಮ್ಮದಿಯಿಂದ ಇರಲು ಸಾಧ್ಯ. ಆದರೆ ತಾಂತ್ರಿಕ ದೋಷ ಅಥವಾ ಮಾಹಿತಿ ಕೊರತೆಯಿಂದಾಗಿ ಪಹಣಿ (RTC) ಪತ್ರದಲ್ಲಿ ಸಾಲದ ವಿವರಗಳು ತಪ್ಪಾಗಿ ನಮೂದಾಗಿರುವ ಸಾಧ್ಯತೆಗಳಿರುತ್ತವೆ. ಇಂತಹ ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಈಗ ನೀವು ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ
ಡಿಜಿಟಲ್ ಕ್ರಾಂತಿಯ ಈ ಕಾಲದಲ್ಲಿ, ನಿಮ್ಮ ಜಮೀನಿನ ಮೇಲೆ ಯಾವ ಬ್ಯಾಂಕಿನಿಂದ ಎಷ್ಟು ಬೆಳೆ ಸಾಲ (Crop Loan) ಪಡೆಯಲಾಗಿದೆ ಎಂಬ ಸಂಪೂರ್ಣ ವಿವರವನ್ನು ನಿಮ್ಮ ಕೈಯಲ್ಲಿರುವ ಮೊಬೈಲ್ ಮೂಲಕವೇ ಕೇವಲ 2 ನಿಮಿಷದಲ್ಲಿ ಪರಿಶೀಲಿಸಬಹುದು.
ಏಕೆ ಈ ಪರಿಶೀಲನೆ ಮುಖ್ಯ?
ನೀವು ಬ್ಯಾಂಕ್ಗೆ ಸಾಲ ಮರುಪಾವತಿಸಿದ ನಂತರವೂ ಪಹಣಿಯಲ್ಲಿ 'ಋಣಭಾರ' (Encumbrance) ತೋರಿಸುತ್ತಿದ್ದರೆ ಅದನ್ನು ತಕ್ಷಣ ಸರಿಪಡಿಸಿಕೊಳ್ಳಬಹುದು.
ಕೆಲವು ಪ್ರಕರಣಗಳಲ್ಲಿ ರೈತರಿಗೆ ತಿಳಿಯದೆಯೇ ಅವರ ದಾಖಲೆ ಬಳಸಿ ಬೇರೆಯವರು ಸಾಲ ಪಡೆದ ಉದಾಹರಣೆಗಳಿವೆ. ಇದನ್ನು ಪತ್ತೆ ಹಚ್ಚಲು ಇದು ಸುಲಭ ದಾರಿ.
ಕರ್ನಾಟಕ ಸರ್ಕಾರದ ಭೂಮಿ (Bhoomi) ಪೋರ್ಟಲ್ ಮೂಲಕ ನಿಮ್ಮ ಜಮೀನಿನ ಹಕ್ಕು ಮತ್ತು ಹೊಣೆಗಾರಿಕೆಗಳ ಬಗ್ಗೆ ನಿಖರ ಮಾಹಿತಿ ಪಡೆಯಬಹುದು.
ಮೊಬೈಲ್ನಲ್ಲಿ ಸಾಲದ ವಿವರ ಚೆಕ್ ಮಾಡುವುದು ಹೇಗೆ? (Step-by-Step)
ನಿಮ್ಮ ಜಮೀನಿನ ಹಕ್ಕು ಮತ್ತು ಹೊಣೆಗಾರಿಕೆಗಳನ್ನು ತಿಳಿಯಲು ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸಿ:
ಮೊದಲು ನಿಮ್ಮ ಮೊಬೈಲ್ ಬ್ರೌಸರ್ನಲ್ಲಿ ಕರ್ನಾಟಕ ಸರ್ಕಾರದ ಅಧಿಕೃತ Bhoomi Online ಪೋರ್ಟಲ್ಗೆ ಭೇಟಿ ನೀಡಿ.
ಮುಖಪುಟದಲ್ಲಿ ನಿಮ್ಮ ಜಿಲ್ಲೆ (District), ತಾಲೂಕು (Taluk), ಹೋಬಳಿ (Hobli) ಮತ್ತು ಗ್ರಾಮ (Village) ಅನ್ನು ಸರಿಯಾಗಿ ಆಯ್ಕೆ ಮಾಡಿಕೊಳ್ಳಿ.
ನಿಮ್ಮ ಜಮೀನಿನ ಸರ್ವೆ ನಂಬರ್ (Survey Number) ಟೈಪ್ ಮಾಡಿ 'Go' ಬಟನ್ ಒತ್ತಿ. ನಂತರ ಕಾಣಿಸುವ ಪಟ್ಟಿಯಲ್ಲಿ Surnoc ಮತ್ತು ಹಿಸ್ಸಾ ನಂಬರ್ (Hissa Number) ಆಯ್ಕೆ ಮಾಡಿ.
ಈಗ 'Fetch Details' ಮೇಲೆ ಕ್ಲಿಕ್ ಮಾಡಿ. ಅಲ್ಲಿ ನಿಮ್ಮ ಹೆಸರು ಕಾಣಿಸುತ್ತದೆ, ಅದನ್ನು ಆಯ್ಕೆ ಮಾಡಿ.
ಕೊನೆಯದಾಗಿ 'View RTC' ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪಹಣಿ ಪರದೆಯ ಮೇಲೆ ಕಾಣಿಸುತ್ತದೆ.
ಪಹಣಿಯಲ್ಲಿನ ಕಾಲಂ 9 ಮತ್ತು 11 (Column 9 & 11) ಅನ್ನು ಗಮನಿಸಿ. ಇಲ್ಲಿ ನಿಮ್ಮ ಸಾಲದ ಮೊತ್ತ ಮತ್ತು ಬ್ಯಾಂಕಿನ ಹೆಸರು ನಮೂದಾಗಿರುತ್ತದೆ.
ಸಾಲ ತೀರಿಸಿದರೂ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಏನು ಮಾಡಬೇಕು?
ನೀವು ಬ್ಯಾಂಕ್ಗೆ ಪೂರ್ತಿ ಸಾಲ ಕಟ್ಟಿದ್ದರೂ ದಾಖಲೆಗಳಲ್ಲಿ ಇನ್ನೂ ಸಾಲ ಕಾಣಿಸುತ್ತಿದ್ದರೆ, ಅದನ್ನು ಸರಿಪಡಿಸಲು ಈ ಕ್ರಮಗಳನ್ನು ಅನುಸರಿಸಿ:
ನೀವು ಸಾಲ ಪಡೆದ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಮ್ಯಾನೇಜರ್ ಅವರನ್ನು ಭೇಟಿ ಮಾಡಿ.
ನೀವು ಸಾಲ ತೀರಿಸಿದ ರಶೀದಿ ಅಥವಾ 'ಸಾಲ ಮುಕ್ತ ಪತ್ರ' (No Due Certificate) ಅನ್ನು ತೋರಿಸಿ.
ಪಹಣಿಯಲ್ಲಿನ ಸಾಲದ ಎಂಟ್ರಿ ತೆಗೆದುಹಾಕಲು 'Bank Release Order' ನೀಡುವಂತೆ ಬ್ಯಾಂಕಿಗೆ ಮನವಿ ಮಾಡಿ.
ಬ್ಯಾಂಕಿನವರು ಆನ್ಲೈನ್ ಮೂಲಕ ಕಂದಾಯ ಇಲಾಖೆಗೆ ಈ ಮಾಹಿತಿ ರವಾನಿಸಿದ ನಂತರ, ನಿಮ್ಮ ಪಹಣಿಯಲ್ಲಿನ ಸಾಲದ ವಿವರ ತಾನಾಗಿಯೇ ಅಳಿಸಿ ಹೋಗುತ್ತದೆ.
Bele sala status-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ-crop loan status
ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್(Survey number) ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.
ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ(Bele sala) ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.
ಸಾಲ(crop loan status)ವಿವರ ಚೆಕ್ ಮಾಡುವುದು ಹೇಗೆ?
ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು
https://landrecords.karnataka.gov.in/Service2/
ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ.
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ


ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ

ನಂತರ view ಮೇಲೆ ಕ್ಲಿಕ್ ಮಾಡಿ


ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ

ಇದನ್ನೂ ಓದಿ
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list - https://krushirushi.in/Bele-sala-manna-list-1427
ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ. ಎಂಬ ಮಾಹಿತಿ ಇರುತ್ತದೆ.

ಈ ಮಾಹಿತಿ ರೈತರಿಗೆ ತುಂಬಾ ಅನುಕೂಲವಾಗಿದೆ ಸರ್ವೇ ನಂಬರ್ ನಮೂದಿಸಿದರೆ ಸಾಕು ರೈತರು ದೇಶದ ಯಾವುದೇ ಮೂಲೆಯಿಂದಲೂ ಮಾಹಿತಿ ಪಡೆಯಬಹುದು. ಕೇವಲ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವ ಮಾಹಿತಿ ಎಲ್ಲವೂ ರೈತರಿಗೆ ಸಿಗಲಿದೆ.
ಸ್ಥಳೀಯ ಉತ್ಪನ್ನಗಳಿಗೆ ಸ್ಥಳೀಯವಾಗಿ ಮಾರುಕಟ್ಟೆ ಒದಗಿಸುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ಭಾರತೀಯ ರೈಲ್ವೆಯ 'ಒಂದು ನಿಲ್ದಾಣ ಒಂದು ಉತ್ಪನ್ನ' ಎಂಬ ವಿನೂತನ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯು 'ವೋಕಲ್ ಫಾರ್ ಲೋಕಲ್' (ಸ್ಥಳೀಯತೆಗೆ ಧ್ವನಿ) ಆಶಯದಡಿ ದೇಶದ ಸ್ಥಳೀಯ ಕಲೆ ಮತ್ತು ಕುಶಲಕರ್ಮಿಗಳನ್ನು ಉತ್ತೇಜಿಸುವ ಒಂದು ಕ್ರಾಂತಿಕಾರಿ ಉಪಕ್ರಮವಾಗಿ ಹೊರಹೊಮ್ಮಿದೆ. ಈ ಯೋಜನೆಯು ದೇಶಾದ್ಯಂತ 2,002 ರೈಲ್ವೆ ನಿಲ್ದಾಣಗಳಿಗೆ ವಿಸ್ತರಿಸಲ್ಪಟ್ಟು, 2,326 ಮಳಿಗೆಗಳ ಮೂಲಕ ಸುಮಾರು 1.32 ಲಕ್ಷಕ್ಕೂ ಅಧಿಕ ಕುಶಲಕರ್ಮಿಗಳು, ನೇಕಾರರು ಮತ್ತು ಸಣ್ಣ ಉತ್ಪಾದಕರಿಗೆ ಸುಸ್ಥಿರ ಜೀವನೋಪಾಯವನ್ನು ಕಲ್ಪಿಸಿಕೊಟ್ಟಿದೆ. ರೈಲ್ವೆ ನಿಲ್ದಾಣಗಳನ್ನು ಸ್ಥಳೀಯ ಉದ್ಯಮ ಕೇಂದ್ರಗಳನ್ನಾಗಿ ಪರಿವರ್ತಿಸಿರುವ ಈ ಯೋಜನೆಯು, ಬಿದಿರಿನ ಕಲೆ ಮತ್ತು ಮಣ್ಣಿನ ಪಾತ್ರೆಗಳಿಂದ ಹಿಡಿದು ವಿವಿಧ ಪ್ರಾಂತ್ಯಗಳ ಸಾಂಬಾರ ಪದಾರ್ಥಗಳು, ಕೈಮಗ್ಗದ ಬಟ್ಟೆಗಳು ಮತ್ತು ಸಾಂಪ್ರದಾಯಿಕ ಸಿಹಿತಿಂಡಿಗಳವರೆಗೆ ವೈವಿಧ್ಯಮಯ ಪ್ರಾದೇಶಿಕ ಉತ್ಪನ್ನಗಳಿಗೆ ಲಕ್ಷಾಂತರ ಪ್ರಯಾಣಿಕರ ನೇರ ಮಾರುಕಟ್ಟೆಯನ್ನು ಒದಗಿಸುತ್ತಿದೆ.
ಭಾರತ ಸರ್ಕಾರದ ರೈಲ್ವೆ ಸಚಿವಾಲಯವು 2022 ರಲ್ಲಿ ಪ್ರಾರಂಭಿಸಿದ 'ಒಂದು ನಿಲ್ದಾಣ ಒಂದು ಉತ್ಪನ್ನ' ಯೋಜನೆಯು 'ವೋಕಲ್ ಫಾರ್ ಲೋಕಲ್' (ಸ್ಥಳೀಯ ಉತ್ಪನ್ನಗಳಿಗೆ ಧ್ವನಿಯಾಗಿ) ಎಂಬ ದೂರದೃಷ್ಟಿಯಡಿ ರೂಪಿಸಲಾದ ಒಂದು ಪ್ರಮುಖ ಉಪಕ್ರಮವಾಗಿದೆ. ಈ ಯೋಜನೆಯು ರೈಲ್ವೆ ನಿಲ್ದಾಣಗಳನ್ನು ಕೇವಲ ಸಾರಿಗೆ ಕೇಂದ್ರಗಳಾಗಿ ಉಳಿಸದೆ, ಅವುಗಳನ್ನು ಸ್ಥಳೀಯ ಕಲೆ ಮತ್ತು ದೇಶೀಯ ಉತ್ಪನ್ನಗಳ ಪ್ರಚಾರದ ಕೇಂದ್ರಗಳನ್ನಾಗಿ ಪರಿವರ್ತಿಸುವ ಉದ್ದೇಶವನ್ನು ಹೊಂದಿದೆ. ಆ ಮೂಲಕ ಸ್ಥಳೀಯ ಕುಶಲಕರ್ಮಿಗಳು, ನೇಕಾರರು ಮತ್ತು ಸಣ್ಣ ಉತ್ಪಾದಕರಿಗೆ ನೇರ ಮಾರುಕಟ್ಟೆ ಅವಕಾಶವನ್ನು ಕಲ್ಪಿಸಿಕೊಟ್ಟು, ಅವರ ಜೀವನೋಪಾಯಕ್ಕೆ ಸುಸ್ಥಿರವಾದ ಆರ್ಥಿಕ ಆಧಾರವನ್ನು ಒದಗಿಸುವುದು ಈ ಯೋಜನೆಯ ಪ್ರಮುಖ ಗುರಿಯಾಗಿದೆ.

]]>
ನೀವೆಲ್ಲರೂ ಭಾಗ್ಯಲಕ್ಷ್ಮಿ ಬಾಂಡ್ ಬಗ್ಗೆ ಕೇಳಿರುತ್ತೀರಿ. ಅದೇ ರೀತಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನೋಂದಾಯಿತ ಮಹಿಳಾ ಕಾರ್ಮಿಕರಿಗೆ ಹೆರಿಗೆಯ ಸಮಯದಲ್ಲಿ ಆರ್ಥಿಕ ಭದ್ರತೆ ನೀಡಲು ತಾಯಿ ಲಕ್ಷ್ಮೀ ಬಾಂಡ್ ಎಂಬ ವಿಶಿಷ್ಟ ಯೋಜನೆಯನ್ನು ಜಾರಿಗೆ ತಂದಿದೆ. 2022ರ ಮಂಡಳಿಯ ತಿದ್ದುಪಡಿ ನಿಯಮಗಳ ಪ್ರಕಾರ, ಮಹಿಳಾ ಕಾರ್ಮಿಕರ ಹೆಣ್ಣು ಹಾಗೂ ಗಂಡು ಮಗುವಿನ ಜನನಕ್ಕೆ ಸಹಾಯಧನವನ್ನು ಹೆಚ್ಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ಯೋಜನೆ? ಸಹಾಯಧನ ಪಡೆಯುವುದು ಹೇಗೆ? ಎಂಬುದನ್ನು ತಿಳಿಯೋಣ.
ತಾಯಿ ಲಕ್ಷ್ಮೀ ಬಾಂಡ್ (ಹೆರಿಗೆ ಸಹಾಯಧನ) ಯೋಜನೆ ಎನ್ನುವುದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಮಹಿಳಾ ಕಾರ್ಮಿಕರಿಗೆ ನೀಡಲಾಗುವ ಒಂದು ಪ್ರಮುಖ ಸಾಮಾಜಿಕ ಭದ್ರತಾ ಯೋಜನೆಯಾಗಿದೆ. ಈ ಯೋಜನೆಯಡಿ, ಮಹಿಳಾ ಕಾರ್ಮಿಕರ ಮೊದಲ ಎರಡು ಹೆರಿಗೆಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು, ಹೆಣ್ಣು ಮಗುವಿನ ಜನನಕ್ಕೆ 30,000 ರೂ. ಮತ್ತು ಗಂಡು ಮಗುವಿನ ಜನನಕ್ಕೆ 20,000 ರೂ. ವರೆಗೆ ಸಹಾಯಧನವನ್ನು ಬಾಂಡ್ ಅಥವಾ ನೇರ ನಗದು ವರ್ಗಾವಣೆ ಮೂಲಕ ಒದಗಿಸಲಾಗುತ್ತದೆ (ಇತ್ತೀಚಿನ ನಿಯಮ 43 ರಂತೆ ಇದು ಒಟ್ಟಾರೆ 50,000 ವರೆಗೂ ಇರಬಹುದು).

ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಜನಸಾಮಾನ್ಯರಿಗೆ ವೃದ್ಧಾಪ್ಯದ ಸಮಯದಲ್ಲಿ ಪ್ರತಿ ತಿಂಗಳು ನಿಗದಿತ ಹಣವನ್ನು ನೀಡುವ ಮಹತ್ವಕಾಂಕ್ಷಿ ಅಟಲ್ ಪಿಂಚಣಿ ಯೋಜನೆಯನ್ನು ಕೇಂದ್ರ ಸರ್ಕಾರ ಮುಂದಿನ 5 ವರ್ಷಗಳ ಅವಧಿಗೆ ವಿಸ್ತರಿಸಿದೆ. ಕೇಂದ್ರ ಸಚಿವ ಸಂಪುಟವು ಇತ್ತೀಚೆಗೆ ಅಟಲ್ ಪೆನ್ಷನ್ ಯೋಜನೆ ಅನ್ನು 2030-31ರವರೆಗೆ ವಿಸ್ತರಿಸಲು ಅನುಮೋದನೆ ನೀಡಿದೆ. ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಯ ಕುರಿತ ಇಣುಕುನೋಟ ಇಲ್ಲಿದೆ.
ಅಟಲ್ ಪಿಂಚಣಿ ಯೋಜನೆಯಿಂದ ಹಣ ಹಿಂತೆಗೆದುಕೊಳ್ಳುವುದು ಹೇಗೆ?
60 ವರ್ಷಕ್ಕಿಂತ ಮೊದಲು: ನಿಗದಿತ ಅವಧಿಗಿಂತ ಮೊದಲು ಅಟಲ್ ಪಿಂಚಣಿ ಯೋಜನೆ ಯೋಜನೆಯಿಂದ ಹಣ ಹಿಂತೆಗೆದುಕೊಳ್ಳಲು ಅನುಮತಿ ಇಲ್ಲ, ಆದರೆ ಫಲಾನುಭವಿಯ ಸಾವು ಅಥವಾ ಮಾರಣಾಂತಿಕ ಕಾಯಿಲೆಯಂತಹ ಅಸಾಧಾರಣ ಸಂದರ್ಭಗಳಲ್ಲಿ ನಿರ್ಗಮನವನ್ನು ಅನುಮತಿಸಬಹುದು.
60 ವರ್ಷಗಳನ್ನು ತಲುಪುವುದು: ಫಲಾನುಭವಿಗಳು 60 ವರ್ಷ ವಯಸ್ಸನ್ನು ತಲುಪಿದ್ದರೆ, ಅವರು ಸಂಪೂರ್ಣ ಕಾರ್ಪಸ್ ಮೊತ್ತವನ್ನು ವರ್ಷಾಶನ ಮಾಡಲು ಅರ್ಹರಾಗಿರುತ್ತಾರೆ, ಅಂದರೆ ಆಯಾ ಬ್ಯಾಂಕಿನಲ್ಲಿ ಯೋಜನೆಯನ್ನು ಮುಕ್ತಾಯಗೊಳಿಸಿದ ನಂತರ ಮಾಸಿಕ ಪಿಂಚಣಿಗಳನ್ನು ಪಡೆಯುತ್ತಾರೆ.
ಚಂದಾದಾರರ ಮರಣ: ಸಂಗಾತಿಗೆ ಪಿಂಚಣಿ ಲಭ್ಯವಿರುತ್ತದೆ ಮತ್ತು ಸಂಗಾತಿಯ ಮರಣದ ನಂತರ, ಪಿಂಚಣಿ ನಿಧಿಯನ್ನು ನಾಮನಿರ್ದೇಶಿತರಿಗೆ ಹಿಂತಿರುಗಿಸಲಾಗುತ್ತದೆ
ಪಿಂಚಣಿ ಲೆಕ್ಕಾಚಾರ ಹೇಗೆ?
ಉದಾಹರಣೆ-1: 18 ವರ್ಷದಲ್ಲಿ ರೂ. 5,000 ಪಿಂಚಣಿಗೆ ಸೇರುವುದು: 42 ವರ್ಷಗಳ ಕಾಲ ತಿಂಗಳಿಗೆ ರೂ. 210 ಪಾವತಿಸಿ (ಒಟ್ಟು 1.06 ಲಕ್ಷ ರೂ. ಕೊಡುಗೆ), 60 ವರ್ಷದಿಂದ ತಿಂಗಳಿಗೆ ರೂ. 5,000 ಪಿಂಚಣಿ ಪಡೆಯಿರಿ, ಮತ್ತು ಗೊತ್ತುಪಡಿಸಿದವರಿಗೆ ರೂ. 8.5 ಲಕ್ಷ ಮೊತ್ತ ಮರಳಿ ಬರುತ್ತದೆ (ಸಂಗಾತಿ ಮತ್ತು ಗ್ರಾಹಕ ಇಬ್ಬರೂ ಮರಣ ಹೊಂದಿದ ನಂತರ).
ಉದಾಹರಣೆ-2: 40 ವರ್ಷದಲ್ಲಿ ರೂ. 1,000 ಪಿಂಚಣಿಗೆ ಸೇರುವುದು: 20 ವರ್ಷಗಳ ಕಾಲ ತಿಂಗಳಿಗೆ ರೂ. 291 ಪಾವತಿಸಿ (ಒಟ್ಟು 69,840 ರೂ. ಕೊಡುಗೆ), 60 ವರ್ಷದಿಂದ ತಿಂಗಳಿಗೆ ರೂ. 1,000 ಪಿಂಚಣಿ ಪಡೆಯಿರಿ, ಮತ್ತು ಗೊತ್ತುಪಡಿಸಿದವರಿಗೆ ರೂ. 1.7 ಲಕ್ಷ ಮೊತ್ತ ಮರಳಿ ಬರುತ್ತದೆ.
ಉದಾಹರಣೆಗೆ ಈ ಕೋಷ್ಟಕವನ್ನು ಗಮನಿಸಿ:
| ಸೇರುವ ವಯಸ್ಸು (ವರ್ಷಗಳು) | ರೂ. 1,000 ಪಿಂಚಣಿ | ರೂ. 2,000 ಪಿಂಚಣಿ | ರೂ. 3,000 ಪಿಂಚಣಿ | ರೂ. 4,000 ಪಿಂಚಣಿ | ರೂ. 5,000 ಪಿಂಚಣಿ |
| 18 | 42 ರೂ. | 84 ರೂ. | 126 ರೂ. | 168 ರೂ. | 210 ರೂ. |
| 20 | 50 ರೂ. | 100 ರೂ. | 150 ರೂ. | 198 ರೂ. | 248 ರೂ. |
| 25 | 76 ರೂ. | 151 ರೂ. | 226 ರೂ. | 301 ರೂ. | 376 ರೂ. |
| 30 | 116 ರೂ. | 231 ರೂ. | 347 ರೂ. | 462 ರೂ. | 577 ರೂ. |
| 35 | 181 ರೂ. | 362 ರೂ. | 543 ರೂ. | 722 ರೂ. | 902 ರೂ. |
| 40 | 291 ರೂ. | 582 ರೂ. | 873 ರೂ. | 1,164 ರೂ. | 1,454 ರೂ. |
ಕಂತು ಪಾವತಿ ತಪ್ಪಿಸುವಿಕೆಯ ಮೇಲಿನ ದಂಡ
ನಿಮ್ಮ ಪಾವತಿಗಳನ್ನು ತಪ್ಪಿಸಿದರೆ ನಿಮ್ಮ ಬ್ಯಾಂಕ್ ಈ ಕೆಳಗಿನಂತೆ ಕೆಲವು ಹೆಚ್ಚುವರಿ ಮೊತ್ತಗಳನ್ನು ಸಂಗ್ರಹಿಸುತ್ತದೆ:
ಅಟಲ್ ಪಿಂಚಣಿ ಯೋಜನೆಗೆ 7.65 ಕೋಟಿ ಚಂದಾದಾರರುಅಸಂಘಟಿತ ವಲಯಕ್ಕೆ ಭಾರತದ ಪ್ರಮುಖ ನಿವೃತ್ತಿ ಉಳಿತಾಯ ಯೋಜನೆಯಾದ ಅಟಲ್ ಪಿಂಚಣಿ ಯೋಜನೆ ಏಪ್ರಿಲ್ 2025 ರ ವೇಳೆಗೆ 7.65 ಕೋಟಿಗೂ ಹೆಚ್ಚು ಚಂದಾದಾರರನ್ನು ಮತ್ತು ಒಟ್ಟು 45,974.67 ಕೋಟಿ ರೂ.ಗಳ ನಿಧಿಯೊಂದಿಗೆ ಪ್ರಮುಖ ಮೈಲಿಗಲ್ಲನ್ನು ದಾಟಿದೆ. ಈ ಯೋಜನೆಯು ಮಹಿಳೆಯರ ಭಾಗವಹಿಸುವಿಕೆಯಲ್ಲಿ ಸ್ಥಿರವಾದ ಹೆಚ್ಚಳವನ್ನು ಕಂಡಿದೆ, ಈಗ ಒಟ್ಟು ಚಂದಾದಾರರ ಸಂಖ್ಯೆಯಲ್ಲಿ ಮಹಿಳೆಯರೇ ಸರಿಸುಮಾರು 48% ರಷ್ಟಿದ್ದಾರೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.
ಇತರ ಪ್ರಮುಖ ಸಂಗತಿಗಳು
ಅಟಲ್ ಪಿಂಚಣಿ ಯೋಜನೆಯ ಗುಣಲಕ್ಷಣಗಳು
| ಗುಣಲಕ್ಷಣಗಳು | ವಿವರಣೆ |
| ಯೋಜನೆಯ ಹೆಸರು | ಅಟಲ್ ಪಿಂಚಣಿ ಯೋಜನೆ (APY) |
| ಪ್ರಾರಂಭ ದಿನಾಂಕ | ಮೇ 9, 2015 |
| ಗುರಿ | ಅಸಂಘಟಿತ ಕ್ಷೇತ್ರದ ಕಾರ್ಮಿಕರಿಗೆ ನಿವೃತ್ತಿ ನಂತರ ಆರ್ಥಿಕ ಭದ್ರತೆ ಒದಗಿಸುವುದು |
| ಆಡಳಿತ ಸಂಸ್ಥೆ | ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) |
| ಪಿಂಚಣಿ ಮೊತ್ತ | ರೂ. 1,000, ರೂ. 2,000, ರೂ. 3,000, ರೂ. 4,000, ಅಥವಾ ರೂ. 5,000 ಪ್ರತಿ ತಿಂಗಳು (60 ವರ್ಷದಿಂದ ಆರಂಭ) |
| ಸೇರುವ ವಯಸ್ಸು | 18 ರಿಂದ 40 ವರ್ಷಗಳು |
| ಕೊಡುಗೆ ಅವಧಿ | ಕನಿಷ್ಠ 20 ವರ್ಷಗಳು (60 ವರ್ಷ ತಲುಪುವವರೆಗೆ) |
| ಅರ್ಹತೆ | ಭಾರತೀಯ ನಾಗರಿಕ, ಉಳಿತಾಯ ಖಾತೆ ಹೊಂದಿರುವವರು, ಆದಾಯ ತೆರಿಗೆದಾರರಲ್ಲದವರು (1 ಅಕ್ಟೋಬರ್ 2022 ರಿಂದ |
| ಕೊಡುಗೆ ವಿಧಾನ | ಮಾಸಿಕ, ತ್ರೈಮಾಸಿಕ, ಅಥವಾ ಅರ್ಧವಾರ್ಷಿಕವಾಗಿ ಆಟೋ-ಡೆಬಿಟ್ ಮೂಲಕ |
| ಸರ್ಕಾರಿ ಖಾತರಿ | ಹೂಡಿಕೆ ಲಾಭ ಕಡಿಮೆಯಾದರೆ ಸರ್ಕಾರವು ಕನಿಷ್ಠ ಪಿಂಚಣಿ ಭರವಸೆ ನೀಡುತ್ತದೆ |
| ಪೂರ್ವಭಾವಿ ನಿರ್ಗಮನ | ಗಂಭೀರ ರೋಗ ಅಥವಾ ಮರಣದ ಸಂದರ್ಭದಲ್ಲಿ ಮಾತ್ರ; ಕೊಡುಗೆ ಮತ್ತು ಬಡ್ಡಿ ಮರಳಿ ನೀಡಲಾಗುತ್ತದೆ. |
ಪ್ರಶ್ನೋತ್ತರಗಳು
ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರವು ಒಂದು ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಅದೇ ಪ್ರೋತ್ಸಾಹ ಧನ ಯೋಜನೆ ಅಥವಾ 'ಪ್ರೈಸ್ ಮನಿ ಸ್ಕಾಲರ್ಶಿಪ್'. ಶಿಕ್ಷಣದ ವಿವಿಧ ಹಂತಗಳಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ. ಹಣದ ಕೊರತೆಯಿಂದಾಗಿ ಯಾವುದೇ ವಿದ್ಯಾರ್ಥಿ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ 'ಪ್ರೋತ್ಸಾಹ ಧನ ಯೋಜನೆ' ಯೋಜನೆಯು, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದತ್ತ ಪ್ರೇರೇಪಿಸುವ ಒಂದು ಮಹತ್ವದ ಕಾರ್ಯಕ್ರಮವಾಗಿದೆ. ಈ ಯೋಜನೆಯಡಿ SSLC, PUC, ಪದವಿ, ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸ್ಗಳನ್ನು ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ (60% ಕ್ಕಿಂತ ಹೆಚ್ಚು ಅಂಕ) ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ಹಂತಕ್ಕೆ ಅನುಗುಣವಾಗಿ 7,500 ರೂಪಾಯಿಗಳಿಂದ ಗರಿಷ್ಠ 50,000 ರೂಪಾಯಿಗಳವರೆಗೆ ಏಕಕಾಲದ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತಿದ್ದು, ಪ್ರತಿಭೆಯನ್ನು ಗೌರವಿಸಿ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಆಶಯವಾಗಿದೆ.
ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳು ಪ್ರೈಸ್ ಮನಿ ಸ್ಕಾಲರ್ಶಿಪ್ಗೆ ಅರ್ಜಿ ಸಲ್ಲಿಸಲು 2026ರ ಜನವರಿ 31 ಕೊನೆಯ ದಿನಾಂಕವಾಗಿದೆ. ವಿದ್ಯಾರ್ಥಿಗಳು ನಿಗದಿತ ಸಮಯದೊಳಗೆ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿಯನ್ನು ಪೂರ್ಣಗೊಳಿಸಬೇಕೆಂದು ಸೂಚಿಸಲಾಗಿದೆ. ಕೊನೆಯ ಕ್ಷಣದ ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ಅಭ್ಯರ್ಥಿಗಳು ಅಂತಿಮ ದಿನಾಂಕಕ್ಕಿಂತ ಮೊದಲೇ ತಮ್ಮ ಅಂಕಪಟ್ಟಿ, ಆಧಾರ್ ಮತ್ತು ಬ್ಯಾಂಕ್ ವಿವರಗಳೊಂದಿಗೆ ನೋಂದಣಿ ಮಾಡಿಕೊಳ್ಳುವುದು ಸೂಕ್ತ.
ಹೌದು, ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಖಾಸಗಿ ವಿಶ್ವವಿದ್ಯಾಲಯ ಅಥವಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಆರ್ಥಿಕ ಪ್ರೋತ್ಸಾಹ ನೀಡಿ ಬೆಂಬಲಿಸುವ ಉದ್ದೇಶದಿಂದ ದೀಪಿಕಾ ವಿದ್ಯಾರ್ಥಿವೇತನ ಯೋಜನೆ ಜಾರಿಯಾಗಿದೆ. ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್ಜೀ ಫೌಂಡೇಶನ್ ಜಂಟಿಯಾಗಿ ಹಮ್ಮಿಕೊಂಡಿರುವ 'ದೀಪಿಕಾ ವಿದ್ಯಾರ್ಥಿವೇತನ' ಯೋಜನೆಗೆ ರಾಜ್ಯಾದ್ಯಂತ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಇದೀಗ ವಿದ್ಯಾರ್ಥಿಗಳಿಂದ ಎರಡನೇ ಹಂತದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 2025 ರಲ್ಲಿ ಆರಂಭವಾದ ಈ ಯೋಜನೆಯಡಿ ಈಗಾಗಲೇ ಹಲವಾರು ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಂಡಿದ್ದಾರೆ. ರಾಜ್ಯದ ಹೆಣ್ಣುಮಕ್ಕಳ ಉನ್ನತ ಶಿಕ್ಷಣದ ಹಾದಿಯನ್ನು ಸುಗಮಗೊಳಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ದೀಪಿಕಾ ವಿದ್ಯಾರ್ಥಿವೇತನ ಯೋಜನೆ? ಅರ್ಜಿ ಸಲ್ಲಿಸುವುದು ಹೇಗೆ? ಏನೆಲ್ಲಾ ಪ್ರಯೋಜನಗಳು ಲಭ್ಯ ಇತ್ಯಾದಿ ಮಾಹಿತಿಗಳು ಇಲ್ಲಿವೆ.
ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್ಜೀ ಫೌಂಡೇಶನ್ ಸಹಯೋಗದಲ್ಲಿ ಆರಂಭಿಸಲಾದ 'ದೀಪಿಕಾ ವಿದ್ಯಾರ್ಥಿವೇತನ' ಯೋಜನೆಯು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ 10ನೇ ತರಗತಿ ಹಾಗೂ ಪಿಯುಸಿ ಪೂರೈಸಿ, ಪ್ರಸ್ತುತ ಪದವಿ ಅಥವಾ ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ. ಆರ್ಥಿಕ ನೆರವು ನೀಡುತ್ತದೆ. ಹೆಣ್ಣುಮಕ್ಕಳ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ಮತ್ತು ಆರ್ಥಿಕ ಅಡೆತಡೆಗಳನ್ನು ನಿವಾರಿಸುವ ಉದ್ದೇಶ ಹೊಂದಿರುವ ಈ ಯೋಜನೆಯಡಿ, ವಿದ್ಯಾರ್ಥಿನಿಯರು ತಮ್ಮ ಇಡೀ ಕೋರ್ಸ್ ಅವಧಿಯವರೆಗೆ ಈ ಸೌಲಭ್ಯವನ್ನು ಪಡೆಯಬಹುದು. ಆದರೆ ವ್ಯಾಸಂಗದ ಅವಧಿಯಲ್ಲಿ ಯಾವುದೇ ವಿಷಯಗಳಲ್ಲಿ ಅನುತ್ತೀರ್ಣರಾಗದೆ ಯಶಸ್ವಿಯಾಗಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.
ಅಜೀಂ ಪ್ರೇಮ್ಜೀ ವಿದ್ಯಾರ್ಥಿವೇತನದ ಮುಖ್ಯ ಉದ್ದೇಶವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಹಿನ್ನೆಲೆಯಿಂದ ಬಂದ ವಿದ್ಯಾರ್ಥಿನಿಯರು ತಮ್ಮ ಕಾಲೇಜು ಶಿಕ್ಷಣವನ್ನು ಮುಂದುವರಿಸಲು ಬೆಂಬಲ ನೀಡುವುದಾಗಿದೆ. ಭಾರತದಲ್ಲಿ ಶಿಕ್ಷಣದ ಗುಣಮಟ್ಟ ಮತ್ತು ಸಮಾನತೆಯನ್ನು ಸುಧಾರಿಸುವಲ್ಲಿ ಅಜೀಂ ಪ್ರೇಮ್ಜೀ ಫೌಂಡೇಶನ್ ಹೊಂದಿರುವ ಬದ್ಧತೆಯ ಭಾಗವಾಗಿ ಈ ಮಹತ್ವದ ಉಪಕ್ರಮವನ್ನು ಕೈಗೊಳ್ಳಲಾಗಿದೆ.

ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಮಂಜುಶ್ರೀ ಎನ್. ಅವರ ಪ್ರಕಾರ, ಮೊದಲ ಹಂತದ ಅರ್ಜಿ ಸಲ್ಲಿಕೆಯು ಇತ್ತೀಚೆಗೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಜನವರಿ 1, 2026 ರಿಂದ ಎರಡನೇ ಹಂತದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 31ರವರೆಗೆ ಕಾಲಾವಕಾಶ ನೀಡಲಾಗಿದೆ. ಮುಖ್ಯವಾಗಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿನಿಯರಿಗೆ ಅನುಕೂಲವಾಗುವಂತೆ ಈ ಎರಡನೇ ಹಂತವನ್ನು ತೆರೆಯಲಾಗಿದೆ. ಸುಮಾರು 37,000 ವಿದ್ಯಾರ್ಥಿನಿಯರನ್ನು ಗುರಿಯಾಗಿಟ್ಟುಕೊಂಡು ಈ ಯೋಜನೆ ಆರಂಭಿಸಲಾಗಿತ್ತು. ಆದರೆ, ಒಂದು ವೇಳೆ ಅರ್ಹ ಅಭ್ಯರ್ಥಿಗಳ ಸಂಖ್ಯೆ 40,000 ದಾಟಿದರೂ ಸರ್ಕಾರವೇ ಅವರ ಶಿಕ್ಷಣದ ವೆಚ್ಚವನ್ನು ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.
ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್ಜೀ ಫೌಂಡೇಶನ್ ಸೆಪ್ಟೆಂಬರ್ 2025 ರಲ್ಲಿ ಜಂಟಿಯಾಗಿ ಆರಂಭಿಸಿದ 'ದೀಪಿಕಾ ವಿದ್ಯಾರ್ಥಿವೇತನ' ಯೋಜನೆಗೆ ಇದೀಗ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಂದ ಒಂದು ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. 2025ರ ಸಾಲಿನ ದೀಪಿಕಾ ವಿದ್ಯಾರ್ಥಿವೇತನದ ಎರಡನೇ ಹಂತದ ನೋಂದಣಿ ಪ್ರಕ್ರಿಯೆಯು ಈಗ ಆರಂಭವಾಗಿದೆ. ಇದರೊಂದಿಗೆ 2024ರ ಸಾಲಿನ ವಿದ್ಯಾರ್ಥಿವೇತನ ನವೀಕರಣದ ಕೊನೆಯ ದಿನಾಂಕವನ್ನು ಜನವರಿ 31, 2026ರವರೆಗೆ ವಿಸ್ತರಿಸಲಾಗಿದೆ. ಅಂದರೆ, ಜನವರಿ 31, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.ಅರ್ಹ ವಿದ್ಯಾರ್ಥಿನಿಯರು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಬೆಂಬಲಕ್ಕಾಗಿ ಕೆಲಸದ ದಿನಗಳಲ್ಲಿ (ಸೋಮವಾರದಿಂದ ಶುಕ್ರವಾರ, ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ) 9019960536 ಸಂಖ್ಯೆಗೆ ವಾಟ್ಸಾಪ್ ಮೂಲಕ ಸಂಪರ್ಕಿಸಬಹುದಾಗಿದೆ.
]]>
ವಿಕಸಿತ ಭಾರತ 2047'ರ ಗುರಿಯೊಂದಿಗೆ ಸುಸ್ಥಿರ ಮತ್ತು ಹವಾಮಾನ ವೈಪರೀತ್ಯಕ್ಕೆ ಪೂರಕವಾದ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಲು ಕರ್ನಾಟಕ ಸರ್ಕಾರವು ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಅಡಿಯಲ್ಲಿ ಮಹತ್ವದ ಹೆಜ್ಜೆಗಳನ್ನು ಇರಿಸಿದೆ.
ಮಹಿಳಾ ಸ್ವಸಹಾಯ ಸಂಘಗಳ ಒಕ್ಕೂಟವಾದ 'ಸಂಜೀವಿನಿ-KSRLM' ಮೂಲಕ ನೈಸರ್ಗಿಕ ಕೃಷಿಯನ್ನು ಒಂದು ಜೀವನೋಪಾಯದ ಮಾರ್ಗವನ್ನಾಗಿ ರಾಜ್ಯವು ರೂಪಿಸುತ್ತಿದೆ ಎಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ (Dr Shalini Rajneesh) ಅವರು ತಿಳಿಸಿದರು.
ರಾಷ್ಟ್ರ ಮಟ್ಟದ ಮಹಿಳಾ ಸ್ವಸಹಾಯ ಸಂಘಗಳ ನೈಸರ್ಗಿಕ ಕೃಷಿ ಮತ್ತು ಲಕ್ಪತಿ ದೀದಿಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ನೈಸರ್ಗಿಕ ಕೃಷಿಯ ಪ್ರಗತಿಯ ವೇಗ ಆಶದಾಯಕವಾಗಿದ್ದು, ರಾಜ್ಯದ ವಿವಿಧ ಕೃಷಿ ಹವಾಮಾನ ವಲಯಗಳಿಗೆ ಅನುಗುಣವಾಗಿ ನೈಸರ್ಗಿಕ ಕೃಷಿಯನ್ನು ವಿಸ್ತರಿಸಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 990 ಕ್ಲಸ್ಟರ್ಗಳನ್ನು ಆಯ್ಕೆ ಮಾಡಲಾಗಿದ್ದು, 49,500 ಹೆಕ್ಟೇರ್ ಪ್ರದೇಶದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ರೈತರ ಖಾತೆಗೆ ನೇರವಾಗಿ ಜಮೆ:
ನೈಸರ್ಗಿಕ ಕೃಷಿಯಲ್ಲಿ ರಾಜ್ಯದಲ್ಲಿ ರೈತರ ಪಾಲ್ಗೊಳ್ಳುವಿಕೆ ಆಶಾದಾಯಕವಾಗಿದ್ದು ಸರಿಸುಮಾರು 1,35,733 ರೈತರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ರೈತರಿಗೆ ಪ್ರೋತ್ಸಾಹಧನವಾಗಿ ಪ್ರತಿ ಎಕರೆಗೆ 2,000 ರೂ.ಗಳಂತೆ ಒಟ್ಟು 22.90 ಕೋಟಿ ರೂ. ಮೊತ್ತವನ್ನು ಮೊದಲ ಕಂತಿನ ರೂಪದಲ್ಲಿ ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ.
ರಾಜ್ಯದಲ್ಲಿ ನೈಸರ್ಗಿಕ ಕೃಷಿ ಮೂಲಸೌಕರ್ಯ ಪರಿಕರಗಳಿಗಾಗಿ 189 ಜೈವಿಕ ಇನ್ಪುಟ್ ಸಂಪನ್ಮೂಲ ಕೇಂದ್ರಗಳನ್ನು (Bio-input Resource Centres) ಸ್ಥಾಪಿಸಲಾಗಿದೆ. ಮಹಿಳೆಯರು ಕೇವಲ ಫಲಾನುಭವಿಗಳಾಗಿ ಉಳಿಯದೆ, ನೈಸರ್ಗಿಕ ಕೃಷಿಯ ಸಂಶೋಧಕರು ಮತ್ತು ತರಬೇತುದಾರರಾಗಿ ಹೊರಹೊಮ್ಮುವ ಮೂಲಕ ಲಕ್ಷ್ಮಿಪುತ್ರಿಯರನ್ನಾಗಿಸುವ (Lakhpati Didis) ಕನಸು ನನಸಾಗುವತ್ತ ಹೆಜ್ಜೆ ಇಡುತ್ತಿದ್ದಾರೆ.
ನೈಸರ್ಗಿಕ ಕೃಷಿ ಯೋಜನೆಯಡಿ 1,980 ಕೃಷಿ ಸಖಿಯರನ್ನು ಗುರುತಿಸಲಾಗಿದ್ದು, ಇವರು ಗ್ರಾಮ ಮಟ್ಟದಲ್ಲಿ ತಾಂತ್ರಿಕ ನೆರವು ಮತ್ತು ತರಬೇತಿ ನೀಡುತ್ತಿದ್ದಾರೆ. ರಾಸಾಯನಿಕ ಗೊಬ್ಬರಗಳ ಮೇಲಿನ ಖರ್ಚು ಕಡಿಮೆ ಮಾಡುವ ಮೂಲಕ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆಯ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸಿ, 'ಲಖ್ಪತಿ ದೀದಿ' ಯೋಜನೆಯನ್ನು ಸಾಕಾರಗೊಳಿಸಲಾಗುತ್ತಿದೆ.
ನೈಸರ್ಗಿಕ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆಯಲು ನಂಬಿಕಸ್ಥ ಪ್ರಮಾಣೀಕರಣ ವ್ಯವಸ್ಥೆಯನ್ನು ರಾಜ್ಯವು ಜಾರಿಗೆ ತರುತ್ತಿದೆ. ಸಣ್ಣ ರೈತರಿಗೆ ಹೊರೆಯಾಗದಂತೆ ಗುಂಪು ಪ್ರಮಾಣೀಕರಣ ಮತ್ತು ಭಾಗಿತ್ವದ ಖಾತರಿ ವ್ಯವಸ್ಥೆಯನ್ನು ಪಿ.ಜಿ.ಎಸ್ ಮಾದರಿಯನ್ನು (Participatory Guarantee System) ಉತ್ತೇಜಿಸಲಾಗುತ್ತಿದೆ.
ರಾಜ್ಯದ ನೈಸರ್ಗಿಕ ಕೃಷಿಕರ ಬೆಳೆಗಳ ಕುರಿತು ಗ್ರಾಹಕರಲ್ಲಿ ವಿಶ್ವಾಸ ಮೂಡಿಸಲು ಡಿಜಿಟಲ್ ಪ್ಲಾಟ್ಫಾರ್ಮ್ಗಳ ಮೂಲಕ ಉತ್ಪನ್ನಗಳ ಮೂಲವನ್ನು ಪತ್ತೆಹಚ್ಚುವ (Traceability) ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ.
ನೈಸರ್ಗಿಕ ಕೃಷಿಯು ಭೂಮಿಯ ಫಲವತ್ತತೆಯನ್ನು ಹೆಚ್ಚಿಸುವುದಲ್ಲದೆ, ವಿಷಮುಕ್ತ ಆಹಾರದ ಮೂಲಕ ಸಾರ್ವಜನಿಕರ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ. ಮಣ್ಣಿನ ಸಾವಯವ ಇಂಗಾಲದ ಹೆಚ್ಚಳ ಮತ್ತು ಅಂತರ್ಜಲ ಸಂರಕ್ಷಣೆಗೆ ಇದು ಪೂರಕವಾಗಿದೆ. ಕರ್ನಾಟಕವು ನೈಸರ್ಗಿಕ ಕೃಷಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮುಂಚೂಣಿಯಲ್ಲಿರಲು ಬದ್ಧವಾಗಿದ್ದು, ಮಹಿಳಾ ನೇತೃತ್ವದ ಈ ಅಭಿಯಾನವು ಸುಸ್ಥಿರ ಅಭಿವೃದ್ಧಿಯ ಮೈಲಿಗಲ್ಲಾಗಲಿದೆ ಎಂದು ಹೇಳಿದರು.
ನೈಸರ್ಗಿಕ ಕೃಷಿ ಎಂದರೇನು?ಕೇಂದ್ರ ಕೃಷಿ ಸಚಿವಾಲಯದ ವ್ಯಾಖ್ಯಾನದ ಪ್ರಕಾರ ನೈಸರ್ಗಿಕ ಕೃಷಿ ಎಂದರೆ "ರಾಸಾಯನಿಕ-ಮುಕ್ತ" ಕೃಷಿ ಪದ್ಧತಿಯಾಗಿದೆ. ಇದು ಕೇವಲ ಜಾನುವಾರು ಮತ್ತು ಸಸ್ಯ ಸಂಪನ್ಮೂಲಗಳನ್ನು ಬಳಸಿಕೊಂಡು ತಯಾರಿಸಿದ ಕೃಷಿ ಗೊಬ್ಬರಗಳನ್ನು ಮಾತ್ರ ಬಳಸುತ್ತದೆ. ಇದು ಪ್ರಕೃತಿಯ ನಿಯಮಗಳನ್ನು ಕೃಷಿ ಪದ್ಧತಿಗಳಿಗೆ ಅನ್ವಯಿಸುವ ವ್ಯವಸ್ಥೆಯಾಗಿದೆ. ಪ್ರತಿ ಕೃಷಿ ಪ್ರದೇಶದ ನೈಸರ್ಗಿಕ ಜೀವವೈವಿಧ್ಯತೆಯೊಂದಿಗೆ ಇದು ಕಾರ್ಯನಿರ್ವಹಿಸುತ್ತದೆ.
ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಎಂದರೇನು?ಕೇಂದ್ರ ಪ್ರಾಯೋಜಿತ ಯೋಜನೆಯಾದ ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಅನ್ನು, ಸಾಂಪ್ರದಾಯಿಕ ಜ್ಞಾನದಲ್ಲಿ ಬೇರೂರಿರುವ ರಾಸಾಯನಿಕ-ಮುಕ್ತ, ಸುಸ್ಥಿರ ಕೃಷಿಯನ್ನು ಉತ್ತೇಜಿಸಲು ಪ್ರಾರಂಭಿಸಲಾಗಿದೆ. ಈ ಯೋಜನೆಯು ರೈತರಿಗೆ ತರಬೇತಿ ನೀಡುವ ಮೂಲಕ, ಆರ್ಥಿಕ ಪ್ರೋತ್ಸಾಹಕಗಳನ್ನು ಒದಗಿಸುವ ಮೂಲಕ ಮತ್ತು ಜೈವಿಕ ಸಂಪನ್ಮೂಲ ಕೇಂದ್ರಗಳಂತಹ ಮೂಲಸೌಕರ್ಯಗಳನ್ನು ಸ್ಥಾಪಿಸುವ ಮೂಲಕ ಮಣ್ಣಿನ ಆರೋಗ್ಯವನ್ನು ಸುಧಾರಿಸುವ, ರೈತರ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡುವ ಮತ್ತು ಹವಾಮಾನ ಸ್ಥಿತಿಸ್ಥಾಪಕ ಪರಿಸರ ವ್ಯವಸ್ಥೆಗಳನ್ನು ರಚಿಸುವ ಗುರಿಯನ್ನು ಹೊಂದಿದೆ. ಅಲ್ಲದೆ, ಇದು ರಾಸಾಯನಿಕ ಗೊಬ್ಬರಗಳು ಮತ್ತು ಕೀಟನಾಶಕಗಳಂತಹ ಬಾಹ್ಯ ರಾಸಾಯನಿಕಗಳನ್ನು ಅವಲಂಬಿಸುವ ಬದಲು, ಸ್ಥಳೀಯ ಸಂಪನ್ಮೂಲಗಳಾದ ನಾಟಿ ಹಸುಗಳ ಸಗಣಿ ಮತ್ತು ಗಂಜಲವನ್ನು ಆಧರಿಸಿದ ವ್ಯವಸ್ಥೆಗೆ ಸಾಂಪ್ರದಾಯಿಕ ಕೃಷಿಯಿಂದ ಬದಲಾವಣೆ ಮಾಡಲು ಪ್ರಯತ್ನಿಸುತ್ತದೆ. ಭಾರತದ ಕೃಷಿ ಪದ್ಧತಿಗಳನ್ನು ಸುಸ್ಥಿರತೆ, ಹವಾಮಾನ ಸ್ಥಿತಿಸ್ಥಾಪಕತ್ವ ಮತ್ತು ಸುರಕ್ಷಿತ ಆಹಾರದ ಕಡೆಗೆ ವೈಜ್ಞಾನಿಕವಾಗಿ ಬೆಂಬಲಿತ ವಿಧಾನಗಳೊಂದಿಗೆ ಬಲಪಡಿಸುವ ದೃಷ್ಟಿಯಿಂದ, ಕೇಂದ್ರ ಸಚಿವ ಸಂಪುಟವು ನವೆಂಬರ್ 25, 2024 ರಂದು ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ಗೆ ಅನುಮೋದನೆ ನೀಡಿದೆ.
ಯೋಜನೆಯ ಪ್ರಮುಖ ಗುರಿಗಳು
ರೈತರಿಗೆ ಹಣಕಾಸಿನ ನೆರವು ಮತ್ತು ಪ್ರಯೋಜನಗಳುರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವ ರೈತರಿಗೆ ಉತ್ಪಾದನೆ-ಆಧಾರಿತ ಆರ್ಥಿಕ ಪ್ರೋತ್ಸಾಹವನ್ನು ನೀಡುತ್ತದೆ.
1. ನೇರ ಆರ್ಥಿಕ ಪ್ರಯೋಜನಗಳು
ಪ್ರೋತ್ಸಾಹಧನ: ನೈಸರ್ಗಿಕ ಕೃಷಿ ಪದ್ಧತಿಗಳನ್ನು ಅನುಸರಿಸಲು ಮತ್ತು ಜಾನುವಾರುಗಳನ್ನು ನಿರ್ವಹಿಸಲು ರೈತರಿಗೆ ಎರಡು ವರ್ಷಗಳವರೆಗೆ ಪ್ರತಿ ವರ್ಷ ಎಕರೆಗೆ 4,000 ರೂ. ಪ್ರೋತ್ಸಾಹಧನ ನೀಡಲಾಗುತ್ತದೆ.
ವೆಚ್ಚ ಕಡಿತ: ರಾಸಾಯನಿಕ ಆಧಾರಿತ ಬಳಕೆಯನ್ನು ಸಂಪೂರ್ಣವಾಗಿ ತೆಗೆದುಹಾಕುವುದರಿಂದ ಕೃಷಿ ವೆಚ್ಚವು ಗಣನೀಯವಾಗಿ ಕಡಿಮೆಯಾಗುತ್ತದೆ.
2. ಕೃಷಿ ಮತ್ತು ಪರಿಸರ ವ್ಯವಸ್ಥೆಯ ಪ್ರಯೋಜನಗಳು
ಮಣ್ಣಿನ ಆರೋಗ್ಯ: ನೈಸರ್ಗಿಕ ಕೃಷಿಯು ಮಣ್ಣಿನ ಜೈವಿಕತೆಯನ್ನು ಹೆಚ್ಚಿಸಿ, ಮಣ್ಣನ್ನು ಆರೋಗ್ಯಕರ ಮತ್ತು ಹೆಚ್ಚು ಸ್ಥಿತಿಸ್ಥಾಪಕವನ್ನಾಗಿ ಮಾಡುತ್ತದೆ.
ರೈತರಿಗೆ ಯೋಜನೆಯ ಪ್ರಯೋಜನಗಳು
ಮಿಷನ್ನ ಅನುಷ್ಠಾನ ಹೇಗೆ?
ಅರ್ಹತಾ ಮಾನದಂಡಗಳು ಏನು?
ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ ಹೇಗೆ?ಯೋಜನೆಯ ಪ್ರಯೋಜನಗಳನ್ನು ಪಡೆಯಲು ರೈತರು ಆಫ್ಲೈನ್ ಅಥವಾ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಆಫ್ಲೈನ್ ಪ್ರಕ್ರಿಯೆ
ಆನ್ಲೈನ್ ಪ್ರಕ್ರಿಯೆ
ಅಗತ್ಯ ದಾಖಲೆಗಳು
ಆರ್ಥಿಕವಾಗಿ ಹಿಂದುಳಿದ ಮತ್ತು ಮಧ್ಯಮ ವರ್ಗದ ಜನರ ಸ್ವಂತ ಮನೆಯ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಅಡಿಯಲ್ಲಿ ನಿರ್ಮಿಸಲಾದ 42,345 ಮನೆಗಳ ಲೋಕಾರ್ಪಣೆ ಮತ್ತು ಹಕ್ಕುಪತ್ರ ವಿತರಣಾ ಸಮಾರಂಭವು ಜನೆವರಿ 24, 2026 ರಂದು ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮತ್ತು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ನೇತೃತ್ವದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಈ ಕಾರ್ಯಕ್ರಮದ ವಿವರಗಳನ್ನು ಹಂಚಿಕೊಳ್ಳಲಾಗಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಜಾರಿಯಾಗುತ್ತಿರುವ ಈ ವಸತಿ ಯೋಜನೆಯು ರಾಜ್ಯದ ಆರ್ಥಿಕವಾಗಿ ಹಿಂದುಳಿದ ಮತ್ತು ಕಡಿಮೆ ಆದಾಯದ ಗುಂಪುಗಳಿಗೆ ಕೈಗೆಟುಕುವ ದರದಲ್ಲಿ ಸುಸಜ್ಜಿತ ಮನೆಗಳನ್ನು ಒದಗಿಸುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಈ ಯೋಜನೆಯಡಿ ಪ್ರತಿ ಮನೆಗೆ ಸುಮಾರು 7.50 ರೂ. ಲಕ್ಷ ವೆಚ್ಚವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ 2.70 ಲಕ್ಷ ರೂ.ದಿಂದ 3.50 ಲಕ್ಷ ರೂ.ವರೆಗೆ ಭಾರಿ ಸಹಾಯಧನ ನೀಡುತ್ತಿವೆ, ಇದರಿಂದಾಗಿ ಫಲಾನುಭವಿಗಳು ಕೇವಲ 1 ಲಕ್ಷ ರೂ. ರಷ್ಟು ಕಡಿಮೆ ವಂತಿಗೆಯನ್ನು ಪಾವತಿಸಿ ಸ್ವಂತ ಮನೆಯ ಮಾಲೀಕರಾಗಬಹುದು. ಕೇವಲ ತಲೆಗೊಂದು ಸೂರಿಲ್ಲದೆ, ಈ ವಸತಿ ಸಂಕೀರ್ಣಗಳಲ್ಲಿ ಆಸ್ಪತ್ರೆ, ಗ್ರಂಥಾಲಯ ಹಾಗೂ ಸಮುದಾಯ ಭವನಗಳಂತಹ ಆಧುನಿಕ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದ್ದು, ಸಾಮಾಜಿಕ ನ್ಯಾಯದಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.



ಬಿಪಿಎಲ್ ಕಾರ್ಡ್ ಹೊಂದಿದವರು ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ರಿಯಾಯಿತಿ ದರದಲ್ಲಿ ನಾನಾ ಪರೀಕ್ಷೆ, ಚಿಕಿತ್ಸೆ ಸೌಲಭ್ಯ ಪಡೆಯುವುದಕ್ಕೆ ಸರಕಾರ ಎಂದೋ ಅವಕಾಶ ಕಲ್ಪಿಸಿದೆ. ಆದರೆ, ರಾಜ್ಯದ ಅನೇಕ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರೂ ಇದುವರೆಗೆ ಬಿಪಿಎಲ್ ಕಾರ್ಡ್ ಪಡೆಯಲು ಸಾಧ್ಯವಾಗಿಲ್ಲ. ಇಂತಹ ಕುಟುಂಬಗಳಿಗೆ ವೈದ್ಯಕೀಯ ತುರ್ತು ಚಿಕಿತ್ಸೆಯ ಅಗತ್ಯ ಬಿದ್ದಾಗ ಬಿಪಿಎಲ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಚಿಕಿತ್ಸೆಯ ನಾನಾ ಸವಲತ್ತುಗಳು ದೊರೆಯದಂತಾಗಿತ್ತು
ಇದನ್ನು ತಪ್ಪಿಸಲೆಂದೇ ಸರಕಾರ ಇತ್ತೀಚೆಗೆ ವೈದ್ಯಕೀಯ ತುರ್ತು ಘಟಕದ ಸಾಫ್ಟ್ವೇರ್ ಸಿದ್ಧಪಡಿಸಿದೆ. ವೈದ್ಯಕೀಯ ಸೌಲಭ್ಯಕ್ಕಾಗಿ ಕರ್ನಾಟಕ ಒನ್, ಗ್ರಾಮ ಒನ್ಗಳ ಮೂಲಕ ಕಾರ್ಡ್ ನೀಡಲಾಗುತ್ತಿದೆ. ಆಧಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ ಮತ್ತು ವೈದ್ಯಕೀಯ ದಾಖಲೆಗಳನ್ನು ವೈದ್ಯಕೀಯ ತುರ್ತು ಘಟಕಕ್ಕೆ ಸಲ್ಲಿಸಿ ಏಳು ದಿನದೊಳಗೆ ಬಿಪಿಎಲ್ ಕಾರ್ಡ್ ಪಡೆಯಲು ದಾರಿ ಮಾಡಿಕೊಟ್ಟಿದೆ.
ಮತ್ತೊಂದೆಡೆ ಸುಳ್ಳು ದಾಖಲೆಗಳನ್ನು ಒದಗಿಸುತ್ತಿರುವ ಹಿನ್ನೆಲೆ ಅರ್ಜಿ ತಿರಸ್ಕೃತಗೊಳ್ಳುವುದು ಬೆಳಕಿಗೆ ಬರುತ್ತಿವೆ. ಇಂತಹ ಪ್ರಕರಣಗಳು ರಾಜ್ಯಾದ್ಯಂತ ಕಂಡುಬಂದಿದ್ದು, ವಾಮಮಾರ್ಗದ ಮೂಲಕ ಕಾರ್ಡ್ ಪಡೆಯಲು ಯತ್ನಿಸಿ ವಿಫಲವಾಗುತ್ತಿರುವುದು ಆಹಾರ ನಿರೀಕ್ಷಕರ ಪರಿಶೀಲನೆ ಸಂದರ್ಭ ಬೆಳಕಿಗೆ ಬರುತ್ತಿವೆ.
ರಾಜ್ಯಾದ್ಯಂತ ಮೆಡಿಕಲ್ ಎಮರ್ಜೆನ್ಸಿ ಮಾಡ್ಯುಲ್ ಮೂಲಕ ಬಿಪಿಎಲ್ ಕಾರ್ಡ್ ಪಡೆಯಲು ಅವಕಾಶ ದೊರೆತ ದಿನದಿಂದ ರಾಜ್ಯಾದ್ಯಂತ 5,677 ಅರ್ಜಿಗಳು ಫಲಾನುಭವಿಗಳಿಂದ ಸಲ್ಲಿಕೆಯಾಗಿದ್ದು, ಅರ್ಜಿ ಹಾಕಿದ ಬೆನ್ನಲ್ಲೇ 203 ಜನ ಹಿಂಪಡೆದಿದ್ದಾರೆ. ಈ ಅವಕಾಶದಡಿ ಬಿಪಿಎಲ್ ಕಾರ್ಡ್ ಕೋರಿ ಅರ್ಜಿ ಹಾಕಿದ 2327 ಅರ್ಜಿದಾರರ ಸ್ಥಳ ತಪಾಸಣೆ ಮಾಡಿದ್ದು, 906 ಅರ್ಜಿಗಳು ಅಧಿಕೃತವಾಗಿ ಅನುಮೋದನೆಗೊಂಡಿವೆ. ಇದೇ ವೇಳೆ ಸುಳ್ಳು, ಅಸ್ಪಷ್ಟ ದಾಖಲೆ ಒದಗಿಸಿದ ಕಾರಣಕ್ಕೆ 706 ಅರ್ಜಿಗಳು ತಿರಸ್ಕೃತಗೊಳ್ಳುವಂತಾಗಿದೆ. ಹಾಗಾಗಿ, ರಾಜ್ಯಾದ್ಯಂತ ಇವತ್ತಿನವರೆಗೆ ಇನ್ನೂ 4065 ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ ಕೊಡುವ ಕಾರ್ಯ ಬಾಕಿ ಇದೆ.
ಸದುದ್ದೇಶಕ್ಕಾಗಿ ಆರಂಭಿಸಿದ ಮೆಡಿಕಲ್ ಎಮರ್ಜೆನ್ಸಿ ಮಾಡ್ಯೂಲ್, ಅರ್ಹರಿಂದ ಸಮರ್ಪಕ ಬಳಕೆಯಾಗುತ್ತಿಲ್ಲಎಂಬ ದೂರುಗಳು ಕೇಳಿಬಂದಿರುವುದು ಒಂದೆಡೆಯಾದರೆ ಮಧ್ಯವರ್ತಿಗಳು ಫಲಾನುಭವಿಗಳನ್ನು ದಾರಿ ತಪ್ಪಿಸಿ ಸುಳ್ಳು ದಾಖಲೆ ಸಲ್ಲಿಸುತ್ತಿರುವುದು ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಇದರಿಂದ ಪ್ರತಿ ಅರ್ಜಿಯೊಂದಿಗೆ ಲಗತ್ತಿಸಿದ ಆಧಾರ್ ಕಾರ್ಡ್, ಆದಾಯ ಪ್ರಮಾಣಪತ್ರದ ಜತೆಗೆ ಮುಖ್ಯವಾಗಿ ವೈದ್ಯಕೀಯ ದಾಖಲೆಗಳನ್ನು ಕೂಲಂಕಷವಾಗಿ ತಪಾಸಣೆ ಮಾಡುವಂತಾಗಿದೆ.
]]>
ರೈತರು ತಮ್ಮ ಹೊಲಗಳಿಗೆ ನೀರು ಹರಿಸುವ ಉದ್ದೇಶದಿಂದ ತರಾತುರಿಯಲ್ಲಿ ಪಂಪ್ಸೆಟ್ಗಳನ್ನು ಹಾಕಿಸಿಕೊಂಡು ಅವುಗಳನ್ನು ಬಳಕೆ ಮಾಡುತ್ತಿದ್ದಾರೆ. ಅದರೆ, ಕಾನೂನಿನ ಪ್ರಕಾರ ಹೀಗೆ ಮಾಡುವುದು ಅಕ್ರಮ. ಆದರೆ, ರೈತರ ಹಿತದೃಷ್ಟಿಯನ್ನು ಮನದಲ್ಲಿ ಇಟ್ಟುಕೊಂಡು ಅಕ್ರಮ ಪಂಪ್ಸೆಟ್ಗಳನ್ನು ಊರ್ಜಿತಗೊಳಿಸಲು ಸರ್ಕಾರ ಮುಂದಾಗಿದೆ. ಕರ್ನಾಟಕದ ರೈತರಿಗೆ ಕೃಷಿ ಪಂಪ್ಸೆಟ್ಗಳ ಅಕ್ರಮ ಸಂಪರ್ಕವನ್ನು ಸಕ್ರಮಗೊಳಿಸಲು ಸರ್ಕಾರವು 'ಅಕ್ರಮ-ಸಕ್ರಮ' ಯೋಜನೆಯನ್ನು ಮತ್ತೆ ಚುರುಕುಗೊಳಿಸಿದೆ. ಈ ಯೋಜನೆಯ ಮೂಲಕ ಅನಧಿಕೃತವಾಗಿ ವಿದ್ಯುತ್ ಬಳಸುತ್ತಿದ್ದ ಲಕ್ಷಾಂತರ ರೈತರಿಗೆ ಕಾನೂನುಬದ್ಧ ಸಂಪರ್ಕ ಕಲ್ಪಿಸಿ, ಸುಸ್ಥಿರ ಕೃಷಿಗೆ ದಾರಿಯ ಮಾಡಿಕೊಡಲಾಗುತ್ತಿದೆ. ಈ ಯೋಜನೆಯ ಸ್ಥಿತಿಗತಿ, ಪ್ರಕ್ರಿಯೆ ಮತ್ತು ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ಕರ್ನಾಟಕ ಸರ್ಕಾರದ 'ಪಂಪ್ಸೆಟ್ ಅಕ್ರಮ-ಸಕ್ರಮ' ಯೋಜನೆಯು ಅನುಮತಿ ಪಡೆಯದೆ ಅನಧಿಕೃತವಾಗಿ ಬಳಸುತ್ತಿದ್ದ ಕೃಷಿ ಪಂಪ್ಸೆಟ್ಗಳಿಗೆ ಕಾನೂನುಬದ್ಧ ವಿದ್ಯುತ್ ಸಂಪರ್ಕ ಕಲ್ಪಿಸುವ ಮಹತ್ವಾಕಾಂಕ್ಷೆಯ ಉಪಕ್ರಮವಾಗಿದೆ. ಈ ಯೋಜನೆಯಡಿ, ವಿದ್ಯುತ್ ಜಾಲದಿಂದ 500 ಮೀಟರ್ ಒಳಗಿರುವ ಪಂಪ್ಸೆಟ್ಗಳನ್ನು ನಿಗದಿಪಡಿಸಿದ ಶುಲ್ಕದೊಂದಿಗೆ (ಸುಮಾರು 10,000 ರೂ.) ಸಕ್ರಮಗೊಳಿಸಿ ಅಧಿಕೃತ RR ಸಂಖ್ಯೆ ನೀಡಲಾಗುತ್ತದೆ. ಇನ್ನು 500 ಮೀಟರ್ಗಿಂತ ದೂರವಿರುವ ಪಂಪ್ಸೆಟ್ಗಳಿಗೆ ಕುಸುಮ್-ಸಿ ಯೋಜನೆಯಡಿ ಶೇ. 80ರಷ್ಟು ಸರ್ಕಾರಿ ಸಹಾಯಧನದೊಂದಿಗೆ ಸೌರಶಕ್ತಿ ಪಂಪ್ಸೆಟ್ಗಳನ್ನು ಅಳವಡಿಸಿಕೊಳ್ಳಲು ಉತ್ತೇಜಿಸಲಾಗುತ್ತದೆ. ಈ ಮೂಲಕ ರೈತರಿಗೆ ಹಗಲು ವೇಳೆ ನಿರಂತರ 7 ಗಂಟೆಗಳ ಕಾಲ ಉಚಿತ ವಿದ್ಯುತ್ ಒದಗಿಸುವುದು, ಸುಟ್ಟುಹೋದ ಟ್ರಾನ್ಸ್ಫಾರ್ಮರ್ಗಳ ಉಚಿತ ದುರಸ್ತಿ ಮತ್ತು ಅಕ್ರಮ ಸಂಪರ್ಕದ ದಂಡದಿಂದ ಮುಕ್ತಿ ದೊರೆಯಲಿದೆ.

ಕರ್ನಾಟಕದ ವಿವಿಧ ವಿದ್ಯುತ್ ವಿತರಣಾ ಕಂಪನಿಗಳ ವ್ಯಾಪ್ತಿಯಲ್ಲಿ ರೈತರು ಅನಿವಾರ್ಯ ಕಾರಣಗಳಿಂದ ಅನುಮತಿ ಪಡೆಯದೆ ಪಂಪ್ಸೆಟ್ಗಳನ್ನು ಅಳವಡಿಸಿಕೊಂಡಿದ್ದರು. ಇಂತಹ ಅಕ್ರಮ ಸಂಪರ್ಕಗಳಿಂದಾಗಿ ವಿದ್ಯುತ್ ಜಾಲದ ಮೇಲೆ ಒತ್ತಡ ಉಂಟಾಗುತ್ತಿತ್ತು ಮತ್ತು ರೈತರಿಗೆ ಸರ್ಕಾರಿ ಸೌಲಭ್ಯಗಳು ಸಿಗುತ್ತಿರಲಿಲ್ಲ. ಇದನ್ನು ಸರಿಪಡಿಸಲು ಅಕ್ರಮ-ಸಕ್ರಮ ಯೋಜನೆಯನ್ನು ಜಾರಿಗೆ ತರಲಾಗಿದೆ.
ಅಕ್ರಮ-ಸಕ್ರಮ ಯೋಜನೆಯಡಿ ಪಂಪ್ಸೆಟ್ ಸಕ್ರಮಗೊಳಿಸುವುದರಿಂದ ರೈತರಿಗೆ ಹಲವಾರು ಮಹತ್ವದ ಪ್ರಯೋಜನಗಳು ದೊರೆಯುತ್ತವೆ. ಮೊದಲನೆಯದಾಗಿ, ಇದು ರೈತರಿಗೆ ಕಾನೂನುಬದ್ಧ ರಕ್ಷಣೆ ನೀಡುತ್ತದೆ. ಇದರಿಂದಾಗಿ ದಂಡ ಪಾವತಿಸುವ ಅಥವಾ ವಿದ್ಯುತ್ ಸಂಪರ್ಕ ಕಡಿತಗೊಳ್ಳುವ ಭೀತಿಯಿಲ್ಲದೆ ನಿಶ್ಚಿಂತೆಯಿಂದ ಕೃಷಿ ಚಟುವಟಿಕೆಗಳನ್ನು ಮುಂದುವರಿಸಬಹುದು. ಎರಡನೆಯದಾಗಿ, ಸಂಪರ್ಕವು ಅಧಿಕೃತಗೊಂಡ ನಂತರ ಟ್ರಾನ್ಸ್ಫಾರ್ಮರ್ ಸುಟ್ಟು ಹೋದರೆ ಅಥವಾ ವಿದ್ಯುತ್ ಕಂಬ ಹಾಗೂ ತಂತಿಗಳಿಗೆ ಹಾನಿಯಾದರೆ, ಸಂಬಂಧಪಟ್ಟ ಎಸ್ಕಾಂಗಳೇ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಉಚಿತವಾಗಿ ದುರಸ್ತಿ ಮಾಡಿಕೊಡುತ್ತವೆ. ಇವೆಲ್ಲಕ್ಕಿಂತ ಮುಖ್ಯವಾಗಿ, ಸಕ್ರಮಗೊಂಡ ಪಂಪ್ಸೆಟ್ಗಳಿಗೆ ಅಧಿಕೃತ RR ಸಂಖ್ಯೆ ದೊರೆಯುವುದರಿಂದ, ರೈತರು ಸರ್ಕಾರದ ಉಚಿತ ವಿದ್ಯುತ್ ಅಥವಾ ರಿಯಾಯಿತಿ ದರದ ವಿದ್ಯುತ್ ಯೋಜನೆಗಳಿಗೆ ನೇರವಾಗಿ ಅರ್ಹರಾಗುತ್ತಾರೆ ಮತ್ತು ಸೌರ ಪಂಪ್ಸೆಟ್ ಅಳವಡಿಕೆಗೆ ಸಿಗುವ ಬೃಹತ್ ಸಬ್ಸಿಡಿ ಸೌಲಭ್ಯವನ್ನೂ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಅಥವಾ ದೂರುಗಳಿಗಾಗಿ ಕರ್ನಾಟಕದ ಉಚಿತ ವಿದ್ಯುತ್ ಸಹಾಯವಾಣಿ ಸಂಖ್ಯೆ 1912 ಕ್ಕೆ ಕರೆ ಮಾಡಬಹುದು.
]]>
ಕರ್ನಾಟಕ ಸರ್ಕಾರವು ಸಹಕಾರ ಸಂಘಗಳ ಸದಸ್ಯರಿಗಾಗಿ ಜಾರಿಗೆ ತಂದಿರುವ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯು ಗ್ರಾಮೀಣ ಮತ್ತು ನಗರ ಪ್ರದೇಶದ ಸಹಕಾರಿ ಸದಸ್ಯರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಯೋಜನೆಯಾಗಿದೆ. ಯಶಸ್ವಿನಿ ಯೋಜನೆಯು ಸಹಕಾರಿ ಕುಟುಂಬಗಳಿಗೆ ಆಪತ್ಕಾಲದ ಮಿತ್ರನಿದ್ದಂತೆ. ಈ ಯೋಜನೆಯಡಿ 2025-26ನೇ ಸಾಲಿನ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ಮರುಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ಯಶಸ್ವಿನಿ ಆರೋಗ್ಯ ವಿಮೆ ಯೋಜನೆ? ಪ್ರಯೋಜನಗಳೇನು? ನೋಂದಣಿ ಮಾಡುವುದು ಹೇಗೆ? ಇತ್ಯಾದಿ ಮಾಹಿತಿಗಳು ಇಲ್ಲಿವೆ.
ಯಶಸ್ವಿನಿ ಆರೋಗ್ಯ ಯೋಜನೆಯು ಕರ್ನಾಟಕ ಸರ್ಕಾರದ ಒಂದು ಮಹತ್ವಾಕಾಂಕ್ಷೆಯ ನಗದು ರಹಿತ ಚಿಕಿತ್ಸಾ ಯೋಜನೆಯಾಗಿದೆ. ಇದು ರಾಜ್ಯದ ಸಹಕಾರ ಸಂಘಗಳ ಸದಸ್ಯರು ಮತ್ತು ಅವರ ಕುಟುಂಬದವರಿಗೆ ಅಲ್ಪ ಮೊತ್ತದ ವಾರ್ಷಿಕ ವಂತಿಗೆಯೊಂದಿಗೆ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ಒದಗಿಸುತ್ತದೆ. ಈ ಯೋಜನೆಯಡಿ ನೋಂದಾಯಿತ ಫಲಾನುಭವಿಗಳು ರಾಜ್ಯಾದ್ಯಂತ ಇರುವ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ವರ್ಷಕ್ಕೆ ಗರಿಷ್ಠ 5 ಲಕ್ಷ ರೂ.ದವರೆಗೆ ಸುಮಾರು 2,128 ಕ್ಕೂ ಹೆಚ್ಚು ವಿವಿಧ ರೀತಿಯ ಶಸ್ತ್ರಚಿಕಿತ್ಸೆ ಮತ್ತು ICU ಚಿಕಿತ್ಸೆಗಳನ್ನು ಪಡೆಯಬಹುದು. ರಾಜ್ಯದ ಎಲ್ಲಾ ಸಹಕಾರಿಗಳ ಮತ್ತು ರೈತರ ನಿರಂತರ ಒತ್ತಾಯ ಹಾಗೂ ಬೇಡಿಕೆ ಪರಿಗಣಿಸಿ ಈ ಹಿಂದೆ 2018ರಲ್ಲಿ ಸ್ಥಗಿತಗೊಳಿಸಿದ್ದ ಯಶಸ್ವಿನಿ ಯೋಜನೆಯನ್ನು ಪುನರ್ ಜಾರಿಗೊಳಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿ, 2022-23ನೇ ಸಾಲಿನ ಆಯವ್ಯಯದಲ್ಲಿ ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ಘೋಷಣೆ ಮಾಡಿದೆ. ಯೋಜನೆ ಜಾರಿಗಾಗಿ “ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್”ಅನ್ನು ರಚಿಸಿದ್ದು, ಇದಕ್ಕೆ ಮಾನ್ಯ ಮುಖ್ಯಮಂತ್ರಿಗಳು ಮಹಾ ಪೋಷಕರಾಗಿ, ಸಹಕಾರ ಸಚಿವರು ಪೋಷಕರಾಗಿ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಸಹಕಾರ ಇಲಾಖೆ ಇವರು ಟ್ರಸ್ಟ್ನ ಅಧ್ಯಕ್ಷರಾಗಿರುತ್ತಾರೆ.


ಸರ್ಕಾರಿ ನೌಕರರು, ಖಾಸಗಿ ಕಂಪನಿಯಲ್ಲಿ 30,000 ರೂ.ಕ್ಕಿಂತ ಹೆಚ್ಚು ವೇತನ ಪಡೆಯುವವರು ಮತ್ತು ಈಗಾಗಲೇ ಬೇರೆ ಆರೋಗ್ಯ ವಿಮೆ ಹೊಂದಿರುವವರು ಈ ಯೋಜನೆಗೆ ಅರ್ಹರಲ್ಲ.
]]>
ಮಹಿಳಾ ಉದ್ಯಮಿಗಳಿಗೆ ಕರ್ನಾಟಕ ಸರ್ಕಾರದಿಂದ ಸಿಹಿ ಸುದ್ದಿ. ಕೇವಲ ಶೇ. 4ರಷ್ಟು ಬಡ್ಡಿದರದಲ್ಲಿ ಸಾಲ ಪಡೆಯುವ ಅವಕಾಶ. ಹೊಸ ಉದ್ಯಮ ಸ್ಥಾಪನೆಗೆ ಅಥವಾ ವಿಸ್ತರಣೆಗೆ ರೂ. 5 ಲಕ್ಷದಿಂದ ರೂ. 5 ಕೋಟಿವರೆಗೆ ಸಾಲ ಲಭ್ಯ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಬಡ್ಡಿ ವ್ಯತ್ಯಾಸವನ್ನು ಭರಿಸುತ್ತದೆ. ಅರ್ಹತೆ ಮತ್ತು ಅರ್ಜಿ ಸಲ್ಲಿಕೆ ವಿವರಗಳು ಲಭ್ಯ. ಈ ಕುರಿತ ವಿವರಗಳು ಇಲ್ಲಿವೆ.
ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲು ಸರ್ಕಾರದ ಹಲವು ಯೋಜನೆಗಳನ್ನು ರೂಪಿಸಿದೆ. ಉದ್ಯಮಿಗಳಿಗೆ ಕಡಿಮೆ ಬಡ್ಡಿಯಲ್ಲಿ ಸಾಲವನ್ನು ನೀಡುತ್ತಿದೆ. ಕರ್ನಾಟಕ ಸರ್ಕಾರವು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು ಅತ್ಯಂತ ಆಕರ್ಷಕವಾದ ಸಾಲ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಮಹಿಳಾ ಉದ್ಯಮಿಗಳು ಕೇವಲ ಶೇ. 4ರಷ್ಟು ನಿವ್ವಳ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಪಡೆಯಬಹುದು.
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಈ ಯೋಜನೆಯಡಿ ಮಹಿಳಾ ಉದ್ಯಮಿಗಳಿಗೆ ವಾರ್ಷಿಕ ಶೇ. 4ರಷ್ಟು ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ದೊರೆಯಲಿದ್ದು, ಸಂಸ್ಥೆಯು ಸಾಲವನ್ನು ಮೊದಲು ಶೇ. 12.00 ರಿಂದ ಶೇ. 14.50 ರವರೆಗಿನ ಸಾಮಾನ್ಯ ಬಡ್ಡಿದರದಲ್ಲಿ ಮಂಜೂರು ಮಾಡುತ್ತದೆ. ಸಾಲಗಾರರು ಆರಂಭದಲ್ಲಿ ಈ ಸಾಮಾನ್ಯ ದರದಂತೆ ಕಂತುಗಳನ್ನು ಪಾವತಿಸಬೇಕಾಗುತ್ತದೆ; ಆದರೆ ಉದ್ಯಮಿಯು ಮರುಪಾವತಿಯಲ್ಲಿ ಯಾವುದೇ ವಿಳಂಬ ಮಾಡದೆ ನಿಯಮಿತವಾಗಿ ಕಂತುಗಳನ್ನು ಪಾವತಿಸಿದರೆ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ವಿಧಿಸಿದ ಸಾಮಾನ್ಯ ಬಡ್ಡಿದರ ಮತ್ತು ಶೇ. 4ರ ನಡುವಿನ ಉಳಿದ ಮೊತ್ತವನ್ನು (ವ್ಯತ್ಯಾಸವನ್ನು) ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಪ್ರತಿ ತಿಂಗಳು ಸಹಾಯಧನದ ರೂಪದಲ್ಲಿ ಮರುಪಾವತಿಸುತ್ತದೆ. ಈ ಮೂಲಕ ಮಹಿಳಾ ಉದ್ಯಮಿಗಳ ಮೇಲಿನ ಬಡ್ಡಿಯ ಹೊರೆಯನ್ನು ಗಣನೀಯವಾಗಿ ಕಡಿಮೆ ಮಾಡಲಾಗುತ್ತದೆ. ಸಾಲದ ಮೊತ್ತದ ಶೇ. 0.50 ರಿಂದ ಶೇ. 1.00 ರವರೆಗೆ ಸಂಸ್ಕರಣಾ ಶುಲ್ಕ ಇರುತ್ತದೆ.
ಈ ಯೋಜನೆಯಡಿ ಸಾಲ ಪಡೆಯಲು ಮಹಿಳಾ ಉದ್ಯಮಿಗಳು ತಮ್ಮ ಕಡೆಯಿಂದ ಹೂಡಿಕೆ ಮಾಡಬೇಕಾದ ಬಂಡವಾಳದ ಪಾಲು (ಮಾರ್ಜಿನ್ ಮನಿ) ಅವರು ಉದ್ಯಮವನ್ನು ಸ್ಥಾಪಿಸುವ ಪ್ರದೇಶದ ಮೇಲೆ ಅವಲಂಬಿತವಾಗಿರುತ್ತದೆ. ಅಂದರೆ, ಕೈಗಾರಿಕಾ ದೃಷ್ಟಿಯಿಂದ ಹಿಂದುಳಿದ ಜಿಲ್ಲೆ ಅಥವಾ ಪ್ರದೇಶಗಳಲ್ಲಿ ಉದ್ಯಮ ಪ್ರಾರಂಭಿಸುವವರಿಗೆ ಒಟ್ಟು ಯೋಜನಾ ವೆಚ್ಚದ ಶೇ. 20.00 ರಷ್ಟು ಬಂಡವಾಳ ಹೂಡಿಕೆ ಸಾಕಾಗುತ್ತದೆ. ಆದರೆ ಹಿಂದುಳಿದಿರದ ಇತರ ಸುಧಾರಿತ ಜಿಲ್ಲೆ ಅಥವಾ ಪ್ರದೇಶಗಳಲ್ಲಿ ಉದ್ಯಮ ಸ್ಥಾಪಿಸುವವರು ಯೋಜನಾ ವೆಚ್ಚದ ಶೇ. 22.50 ರಷ್ಟು ಪಾಲನ್ನು ತಮ್ಮ ಸ್ವಂತ ಬಂಡವಾಳವಾಗಿ ಹೊಂದಿರಬೇಕಾಗುತ್ತದೆ.
ಈ ಯೋಜನೆಯಡಿ ಬಡ್ಡಿ ಸಹಾಯಧನದ ಸೌಲಭ್ಯವು ಸಾಲದ ಮೊದಲ ಕಂತು ಬಿಡುಗಡೆಯಾದ ದಿನಾಂಕದಿಂದ ಗರಿಷ್ಠ 5 ವರ್ಷಗಳ ಅವಧಿಗೆ ಮಾತ್ರ ಸೀಮಿತವಾಗಿರುತ್ತದೆ. ಒಂದು ವೇಳೆ ಸಾಲದ ಒಟ್ಟು ಮರುಪಾವತಿ ಅವಧಿಯು 5 ವರ್ಷಗಳಿಗಿಂತ ಹೆಚ್ಚಿದ್ದರೂ ಸಹ, ಉದ್ಯಮಿಗಳು ಸಹಾಯಧನವನ್ನು ಕೇವಲ ಮೊದಲ 5 ವರ್ಷಗಳವರೆಗೆ ಮಾತ್ರ ಪಡೆಯಲು ಅರ್ಹರಾಗಿರುತ್ತಾರೆ. ಇನ್ನು ಸಾಲದ ಒಟ್ಟು ಮರುಪಾವತಿ ಅವಧಿ, ಮಾಸಿಕ ಕಂತುಗಳ ವಿವರ ಹಾಗೂ ಅವಧಿಪೂರ್ವ ಸಾಲ ಮನ್ನಾ ಮಾಡಲು ಇರುವ ಶುಲ್ಕಗಳ ಕುರಿತಾದ ನಿಖರ ಮಾಹಿತಿಗಾಗಿ ಅರ್ಜಿದಾರರು ತಮ್ಮ ಹತ್ತಿರದ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಶಾಖೆಯನ್ನು ನೇರವಾಗಿ ಸಂಪರ್ಕಿಸಿ ಮಾಹಿತಿ ಪಡೆಯುವುದು ಅತ್ಯಗತ್ಯವಾಗಿದೆ.
]]>
ಮಹಿಳಾ ಉದ್ಯಮಿಗಳಿಗೆ ಆರ್ಥಿಕ ನೆರವು ನೀಡಲು ಭಾರತೀಯ ಸ್ಟೇಟ್ ಬ್ಯಾಂಕ್ 'ಸ್ತ್ರೀ ಶಕ್ತಿ ಪ್ಯಾಕೇಜ್' ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ 25 ಲಕ್ಷ ರೂ.ವರೆಗೆ ಸಾಲ ಸಿಗಲಿದ್ದು, 10 ಲಕ್ಷ ರೂ.ವರೆಗೆ ಮೇಲಾಧಾರ ರಹಿತ ಸಾಲ ಲಭ್ಯವಿದೆ. ಉತ್ಪಾದನೆ, ಚಿಲ್ಲರೆ ವ್ಯಾಪಾರ ಮತ್ತು ಸೇವಾ ವಲಯಗಳಲ್ಲಿ ಮಹಿಳೆಯರು ತಮ್ಮ ಉದ್ಯಮಗಳನ್ನು ಬೆಳೆಸಲು ಇದು ಉತ್ತಮ ಅವಕಾಶ ನೀಡುತ್ತದೆ. ಈ ಕುರಿತ ವಿವರಗಳು ಇಲ್ಲಿವೆ.
ಭಾರತದಲ್ಲಿ ಮಹಿಳಾ ಉದ್ಯಮಶೀಲತೆಯನ್ನು ಉತ್ತೇಜಿಸಲು ಸರ್ಕಾರ ಮತ್ತು ಬ್ಯಾಂಕುಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಕರ್ನಾಟಕದಲ್ಲಿ ಸ್ತ್ರೀ ಶಕ್ತಿ ಹೆಸರಿನ ಯೋಜನೆಯನ್ನು ನಾವೆಲ್ಲಾ ಕೇಳಿರುತ್ತೇವೆ. ಇದೇ ರೀತಿಯ ಯೋಜನೆಯೊಂದನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್ ಬ್ಯಾಂಕ್ ಜಾರಿಗೆ ತಂದಿದೆ. ಎಸ್ಬಿಐ ಪ್ರಾಯೋಜಿತ 'ಸ್ತ್ರೀ ಶಕ್ತಿ ಪ್ಯಾಕೇಜ್' ಯೋಜನೆ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಮತ್ತು ತಮ್ಮದೇ ಆದ ಉದ್ಯಮವನ್ನು ಪ್ರಾರಂಭಿಸಲು ಅಥವಾ ವಿಸ್ತರಿಸಲು ಈ ಉತ್ತಮ ವೇದಿಕೆಯಾಗಿದೆ. ಈ ಯೋಜನೆಯ ಕುರಿತಾದ ವಿವರಗಳು ಇಲ್ಲಿವೆ.
ಸ್ತ್ರೀ ಶಕ್ತಿ ಪ್ಯಾಕೇಜ್ ಮುಖ್ಯವಾಗಿ ಭಾರತದ ಮಹಿಳಾ ಉದ್ಯಮಿಗಳಿಗೆ ಎಸ್ಬಿಐ ನಂತಹ ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳು ನೀಡುವ ಸಾಲ ಯೋಜನೆಯಾಗಿದೆ. ಈ ಯೋಜನೆಯು ಮಹಿಳಾ ಉದ್ಯಮಿಗಳಿಗೆ ಉತ್ಪಾದನೆ, ಚಿಲ್ಲರೆ ವ್ಯಾಪಾರ ಮತ್ತು ಸೇವಾ ವಲಯಗಳಲ್ಲಿ ಹಣಕಾಸಿನ ನೆರವು ನೀಡುವ ಗುರಿಯನ್ನು ಹೊಂದಿದೆ. ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳನ್ನು ಬೆಳೆಸಲು ವ್ಯವಹಾರಗಳಿಗೆ ಕಡಿಮೆ ಬಡ್ಡಿದರದಲ್ಲಿ 25 ಲಕ್ಷ ರೂ.ವರೆಗೆ ಸಾಲ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಇನ್ನೊಂದು ವಿಶೇಷತೆಯೆಂದರೆ, 10 ಲಕ್ಷ ರೂ.ದವರೆಗೆ ಮೇಲಾಧಾರ ರಹಿತ ಸಾಲ ಲಭ್ಯವಾಗಲಿದೆ. ಮಹಿಳಾ ಉದ್ಯಮಿಗಳು ನಡೆಸುವ ವ್ಯವಹಾರಗಳಿಗೆ ತಕ್ಕನಾದ ವಿವಿಧ ರೀತಿಯ ಸಾಲದ ಪ್ಯಾಕೇಜ್ಗಳನ್ನು ಈ ಯೋಜನೆ ಒದಗಿಸುತ್ತದೆ. ಈ ಯೋಜನೆಯ ಸೌಲಭ್ಯಗಳನ್ನು ಪಡೆಯಬೇಕಾದರೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಬೆಂಬಲಿಸುವ ಮೂಲಕ ಮಹಿಳೆಯರು ಉದ್ಯಮದ ಕನಿಷ್ಠ 50 ಪ್ರತಿಶತದಷ್ಟು ಮಾಲೀಕತ್ವವನ್ನು ಹೊಂದಿರಬೇಕು.
ಯೋಜನೆಯ ಪ್ರಮುಖ ವೈಶಿಷ್ಟ್ಯಗಳು
ಸಾಲದ ಮೊತ್ತ: ಮಹಿಳಾ ಉದ್ಯಮಿಗಳು ಮತ್ತು ವೃತ್ತಿಪರರು ಈ ಯೋಜನೆಯಡಿ 25 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಪಡೆಯಬಹುದು ಹಾಗೂ ವಿಶೇಷ ಸಂದರ್ಭಗಳಲ್ಲಿ ಈ ಮೊತ್ತವು 50 ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಲ್ಪಡುತ್ತದೆ
ಬಡ್ಡಿ ದರದಲ್ಲಿ ರಿಯಾಯಿತಿ: ಸಾಲದ ಮೊತ್ತವು 2 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿದ್ದರೆ, ಮಹಿಳೆಯರಿಗೆ ಉತ್ತೇಜನ ನೀಡಲು ಬ್ಯಾಂಕ್ ಬಡ್ಡಿ ದರದಲ್ಲಿ ಶೇಕಡಾ 0.5 ರಷ್ಟು ವಿಶೇಷ ರಿಯಾಯಿತಿಯನ್ನು ನೀಡುತ್ತದೆ.
ಶೂನ್ಯ ಭದ್ರತೆ: 10 ಲಕ್ಷ ರೂಪಾಯಿಗಳವರೆಗಿನ ಸಾಲಕ್ಕೆ ಯಾವುದೇ ಆಸ್ತಿ ಅಥವಾ ಶೂರಿಟಿಯನ್ನು ಭದ್ರತೆಯಾಗಿ ನೀಡುವ ಅಗತ್ಯವಿಲ್ಲ, ಏಕೆಂದರೆ ಇದು ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳಿಗೆ ಕ್ರೆಡಿಟ್ ಗ್ಯಾರಂಟಿ ಫಂಡ್ ಟ್ರಸ್ಟ್ (CGTMSE) ಯೋಜನೆಯಡಿ ರಕ್ಷಣೆ ಪಡೆಯುತ್ತದೆ.
ಅರ್ಹ ಕ್ಷೇತ್ರಗಳು: ಈ ಯೋಜನೆಯು ಚಿಲ್ಲರೆ ವ್ಯಾಪಾರ, ಉತ್ಪಾದನಾ ವಲಯ, ಕೃಷಿ ಪೂರಕ ಚಟುವಟಿಕೆಗಳು ಹಾಗೂ ವೈದ್ಯರು, ಚಾರ್ಟರ್ಡ್ ಅಕೌಂಟೆಂಟ್ಸ್ ಮತ್ತು ಬ್ಯೂಟಿ ಪಾರ್ಲರ್ ನಡೆಸುವ ವೃತ್ತಿಪರ ಮಹಿಳೆಯರಿಗೆ ಮುಕ್ತವಾಗಿದೆ.
ಸ್ತ್ರೀ ಶಕ್ತಿ ಯೋಜನೆಯ ವಿವಿಧ ಸಾಲದ ಪ್ಯಾಕೇಜ್ಗಳು
ಚಿಲ್ಲರೆ ವ್ಯಾಪಾರದಲ್ಲಿ ತೊಡಗಿರುವ ಮಹಿಳೆಯರು ಕನಿಷ್ಠ 50,000 ರೂ. ರಿಂದ ಗರಿಷ್ಠ 2 ಲಕ್ಷ ರೂ.ದವರೆಗೆ ಸಾಲದ ಸಹಾಯವನ್ನು ಪಡೆಯಬಹುದು.
ವಿವಿಧ ವ್ಯವಹಾರ ಅಥವಾ ಉದ್ಯಮಗಳನ್ನು ನಡೆಸುವ ಮಹಿಳಾ ಉದ್ದಿಮೆದಾರರಿಗೆ 50,000 ರೂ. ರಿಂದ 2 ರೂ. ಲಕ್ಷದವರೆಗಿನ ಸಾಲದ ಮಿತಿಯನ್ನು ನಿಗದಿಪಡಿಸಲಾಗಿದೆ.
ವೈದ್ಯರು, ಚಾರ್ಟರ್ಡ್ ಅಕೌಂಟೆಂಟ್ಗಳಂತಹ ವೃತ್ತಿಪರ ಮಹಿಳೆಯರು ತಮ್ಮ ವೃತ್ತಿಜೀವನವನ್ನು ವಿಸ್ತರಿಸಲು ಅಥವಾ ಸ್ಥಾಪಿಸಲು 50,000 ರೂ. ರಿಂದ 25 ಲಕ್ಷ ರೂ.ದವರೆಗೆ ಸಾಲ ಪಡೆಯಲು ಅರ್ಹರಿದ್ದಾರೆ.
ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳನ್ನು ನಡೆಸುವ ಮಹಿಳೆಯರಿಗೆ ಈ ಯೋಜನೆಯಡಿ ಕನಿಷ್ಠ 50,000 ರೂ. ರಿಂದ 25 ಲಕ್ಷ ರೂ.ದವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ.
ಯಾವೆಲ್ಲಾ ಉದ್ಯಮಗಳಿಗೆ ಸಾಲ ಸೌಲಭ್ಯಗಳು ಲಭ್ಯ?
ಸ್ತ್ರೀ ಶಕ್ತಿ ಪ್ಯಾಕೇಜ್ ಯೋಜನೆಯು ಕೇವಲ ವ್ಯವಹಾರದಲ್ಲಿ ನೇರವಾಗಿ ತೊಡಗಿಸಿಕೊಂಡಿರುವ ಮಹಿಳೆಯರಿಗಾಗಿ ಮಾತ್ರ ಲಭ್ಯವಿದ್ದು, ದೈನಂದಿನ ವ್ಯಾಪಾರಕ್ಕೆ ಬೇಕಾದ 'ದುಡಿಯುವ ಬಂಡವಾಳ' ಹೆಚ್ಚಿಸಲು ಅಥವಾ ಅಗತ್ಯ ಉಪಕರಣಗಳನ್ನು ಖರೀದಿಸಲು ಈ ಸಾಲವನ್ನು ಬಳಸಬಹುದು.
ಸಿದ್ಧ ಉಡುಪುಗಳ ವಲಯ: ಸಿದ್ಧ ಉಡುಪುಗಳ ತಯಾರಿಕೆ ಅಥವಾ ಬಟ್ಟೆ ವ್ಯಾಪಾರದಲ್ಲಿ ತೊಡಗಿರುವ ಮಹಿಳಾ ಉದ್ಯಮಿಗಳು ತಮ್ಮ ವ್ಯವಹಾರದ ಅಭಿವೃದ್ಧಿಗಾಗಿ ಈ ಯೋಜನೆಯಡಿ ಹೆಚ್ಚಾಗಿ ಸಾಲ ಪಡೆಯುತ್ತಾರೆ.
ಡೈರಿ ಅಥವಾ ಹೈನುಗಾರಿಕೆ ವಲಯ: ಹಾಲು, ಮೊಸರು ಮತ್ತು ಮೊಟ್ಟೆಗಳಂತಹ ಡೈರಿ ಉತ್ಪನ್ನಗಳ ಮಾರಾಟ ಅಥವಾ ಉತ್ಪಾದನೆಯಲ್ಲಿ ತೊಡಗಿರುವ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು.
ಕೃಷಿ ಉತ್ಪನ್ನಗಳು: ಬೀಜಗಳು, ಗೊಬ್ಬರ ಅಥವಾ ಇತರ ಕೃಷಿ ಸಂಬಂಧಿತ ಉತ್ಪನ್ನಗಳ ಮಾರಾಟದಲ್ಲಿ ತೊಡಗಿರುವ ಮಹಿಳಾ ಉದ್ಯಮಿಗಳಿಗೆ ಈ ಯೋಜನೆಯಡಿ ಸಾಲ ಸೌಲಭ್ಯ ಲಭ್ಯವಿದೆ.
ಗೃಹ ಉತ್ಪನ್ನಗಳು: ಬ್ರ್ಯಾಂಡ್ ಇಲ್ಲದ ಸೋಪುಗಳು ಮತ್ತು ಡಿಟರ್ಜೆಂಟ್ಗಳ ತಯಾರಿಕೆ ಅಥವಾ ಮಾರಾಟ ಮಾಡುವ ಮಹಿಳೆಯರು ತಮ್ಮ ಆರ್ಥಿಕ ಅಗತ್ಯಗಳಿಗಾಗಿ ಈ ಯೋಜನೆಯನ್ನು ಬಳಸಿಕೊಳ್ಳಬಹುದು.
ಸ್ತ್ರೀ ಶಕ್ತಿ ಪ್ಯಾಕೇಜ್ ಯೋಜನೆ ವಿವರ
ಬಡ್ಡಿದರ ಎಷ್ಟು?
ಈ ಯೋಜನೆಯಡಿ ಬಡ್ಡಿ ದರಗಳು ಸಾಲದ ಮೊತ್ತಕ್ಕೆ ಅನುಗುಣವಾಗಿ ಬದಲಾಗುತ್ತವೆ. ವಿವಿಧ ವರ್ಗಗಳಿಗೆ ಅನ್ವಯವಾಗುವಂತೆ ಮಾರ್ಜಿನ್ ಮೊತ್ತದಲ್ಲಿ ಶೇಕಡಾ 5 ರಷ್ಟು ರಿಯಾಯಿತಿಯನ್ನು ನೀಡಲಾಗುತ್ತದೆ.
ಅರ್ಹತಾ ಮಾನದಂಡಗಳೇನು?
ಈ ಯೋಜನೆಯಡಿ ಪ್ರಯೋಜನ ಪಡೆಯಲು, ಉದ್ದಿಮೆಯ ಒಡೆತನದಲ್ಲಿ ಮಹಿಳೆಯರ ಪಾಲು ಕನಿಷ್ಠ 51% ಅಥವಾ ಅದಕ್ಕಿಂತ ಹೆಚ್ಚಿರಬೇಕು. ಅಂದರೆ ಮಹಿಳೆಯು ಆ ಸಂಸ್ಥೆಯ ಪ್ರಮುಖ ಪಾಲುದಾರರಾಗಿರಬೇಕು.
ಯೋಜನೆಯ ಲಾಭ ಪಡೆಯಲು ಉದ್ದಿಮೆಯು ಕೇಂದ್ರ ಸರ್ಕಾರದ ಎಂಎಸ್ಎಂಇ ಇಲಾಖೆಯ ಅಡಿಯಲ್ಲಿ ಅಧಿಕೃತವಾಗಿ ನೋಂದಾಯಿಸಲ್ಪಟ್ಟಿರಬೇಕು.
ಸಾಲ ಪಡೆಯುವ ಮಹಿಳೆಯರು ರಾಜ್ಯ ಸರ್ಕಾರದ ವಿವಿಧ ಏಜೆನ್ಸಿಗಳು ಆಯೋಜಿಸುವ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತರಬೇತಿ ಪಡೆದಿರುವುದು ಸಾಲ ಮಂಜೂರಾತಿಗೆ ಹೆಚ್ಚಿನ ಅನುಕೂಲ ಮಾಡಿಕೊಡುತ್ತದೆ.
ಈ ಉದ್ದಿಮೆಯು ಮಹಿಳೆಯರಿಂದಲೇ ನಿರ್ವಹಿಸಲ್ಪಡುತ್ತಿರಬೇಕು ಮತ್ತು ಅವರು ಕಂಪನಿಯ ನಿರ್ದೇಶಕರು ಅಥವಾ ಪಾಲುದಾರರಾಗಿ ಆರ್ಥಿಕ ನಿರ್ಧಾರಗಳಲ್ಲಿ ಪ್ರಮುಖ ಪಾತ್ರ ಹೊಂದಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಸ್ತ್ರೀ ಶಕ್ತಿ ಪ್ಯಾಕೇಜ್ ಯೋಜನೆಯಡಿ ಸಾಲ ಪಡೆಯಲು ಆಸಕ್ತ ಮಹಿಳೆಯರು ಸಾಮಾನ್ಯವಾಗಿ ಎಸ್ಬಿಐನ ಅಧಿಕೃತ ಬ್ಯಾಂಕ್ ಶಾಖೆಗಳಿಗೆ ನೇರವಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಗುರುತಿನ ಚೀಟಿ, ವಿಳಾಸದ ಪುರಾವೆ, ವ್ಯವಹಾರದ ಸಮಗ್ರ ಯೋಜನೆ ಮತ್ತು ಆರ್ಥಿಕ ವರದಿಗಳಂತಹ ಅಗತ್ಯ ದಾಖಲೆಗಳನ್ನು ಬ್ಯಾಂಕಿನ ಮೌಲ್ಯಮಾಪನಕ್ಕಾಗಿ ಸಲ್ಲಿಸುವುದು ಕಡ್ಡಾಯವಾಗಿದೆ. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿದ ನಂತರ, ಬ್ಯಾಂಕ್ ಅಧಿಕಾರಿಗಳು ಉದ್ದಿಮೆಯ ಪರಿಶೀಲನೆ ನಡೆಸಿ ಸಾಲವನ್ನು ಮಂಜೂರು ಮಾಡುತ್ತಾರೆ.
ಬೇಕಾಗುವ ದಾಖಲೆಗಳು
ಗುರುತಿನ ಚೀಟಿ: ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ ಅಥವಾ ಪಾಸ್ಪೋರ್ಟ್.
ವಿಳಾಸ ಪುರಾವೆ: ವಿದ್ಯುತ್ ಬಿಲ್ ಅಥವಾ ಟೆಲಿಫೋನ್ ಬಿಲ್
ಉದ್ದಿಮೆಯ ಪುರಾವೆ: ಉದ್ದಿಮೆಯ ನೋಂದಣಿ ಪತ್ರ ಮತ್ತು ಕಳೆದ 3 ವರ್ಷಗಳ ಬ್ಯಾಲೆನ್ಸ್ ಶೀಟ್.
ಯೋಜನಾ ವರದಿ: ವ್ಯವಹಾರದ ಲಾಭ ಮತ್ತು ನಷ್ಟದ ಅಂದಾಜು ವಿವರಗಳು.
]]>
ನಿಮ್ಮ ಕನಸಿನ ಸ್ವಂತ ಉದ್ಯಮಕ್ಕೆ ಕರ್ನಾಟಕ ಸರ್ಕಾರದ ಮಹತ್ವದ ಕೊಡುಗೆ. ₹1 ಕೋಟಿ ವರೆಗಿನ ಸಾಲಕ್ಕೆ ಕೇವಲ ಶೇ. 4ರಷ್ಟು ಬಡ್ಡಿ ಮಾತ್ರ ನೀವು ಕಟ್ಟಬೇಕು. ಉಳಿದ ಬಡ್ಡಿಯನ್ನು ಸರ್ಕಾರವೇ ಭರಿಸುತ್ತದೆ. ಕೈಗಾರಿಕೆ, ಐಟಿ, ಆರೋಗ್ಯ, ಪ್ರವಾಸೋದ್ಯಮ ಹೀಗೆ ಯಾವುದೇ ಕ್ಷೇತ್ರದಲ್ಲಿ ನಿಮ್ಮ ಉದ್ಯಮವನ್ನು ಐದು ವರ್ಷದೊಳಗೆ ಸ್ಥಾಪಿಸಿ, ಬೆಳೆಸಿ. ಇದು ನಿಮ್ಮ ಆರ್ಥಿಕ ಸ್ವಾವಲಂಬನೆಗೆ ಸುವರ್ಣಾವಕಾಶ!
ಸ್ವಂತ ಉದ್ಯಮ ಆರಂಭಿಸಿ ಆರ್ಥಿಕವಾಗಿ ಸಬಲರಾಗಲು ನಿಮಗೊಂದು ಸುವರ್ಣಾವಕಾಶ. ಕರ್ನಾಟಕ ಸರ್ಕಾರವು ಪರಿಶಿಷ್ಟ ಪಂಗಡದ ಸಮುದಾಯದ ಅಭ್ಯರ್ಥಿಗಳನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಮತ್ತು ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಲು ವಿಶೇಷ ಬಡ್ಡಿ ಸಹಾಯಧನ ಯೋಜನೆಯನ್ನು ಜಾರಿಗೆ ತಂದಿದೆ. ನೀವು ಹೊಸ ಉದ್ಯಮವನ್ನು ಪ್ರಾರಂಭಿಸಲು ಬಯಸಿದ್ದರೆ ಅಥವಾ ಅಸ್ತಿತ್ವದಲ್ಲಿರುವ ಘಟಕವನ್ನು ವಿಸ್ತರಿಸಲು ಆಲೋಚಿಸುತ್ತಿದ್ದರೆ, ಈ ಯೋಜನೆಯು ನಿಮಗೆ ಭದ್ರ ಬುನಾದಿ ಒದಗಿಸಲಿದೆ. ಈ ಹಿನ್ನೆಲೆಯಲ್ಲಿ ಏನಿದು ಬಡ್ಡಿ ಸಹಾಯಧನ ಯೋಜನೆ? ಈ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ? ಪ್ರಯೋಜನಗಳು ಏನು ಎಂಬುದನ್ನು ತಿಳಿಯೋಣ.
ಕರ್ನಾಟಕ ಸರ್ಕಾರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ಪಂಗಡದ ಉದ್ಯಮಿಗಳ ಆರ್ಥಿಕ ಸಬಲೀಕರಣಕ್ಕಾಗಿ ಈ ವಿಶೇಷ ಬಡ್ಡಿ ಸಹಾಯಧನ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಎಂ.ಎಸ್.ಎಂ.ಇ ಘಟಕಗಳು, ಹೋಟೆಲ್, ಫ್ರಾಂಚೈಸಿ ಅಥವಾ ಡೀಲರ್ಶಿಪ್ಗಳಂತಹ ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಅಥವಾ ಅಸ್ತಿತ್ವದಲ್ಲಿರುವ ಘಟಕಗಳನ್ನು ಆಧುನೀಕರಿಸಲು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಥವಾ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ಗಳಿಂದ ಪಡೆಯುವ ಗರಿಷ್ಠ ರೂ. 1.00 ಕೋಟಿ ವರೆಗಿನ ಸಾಲಕ್ಕೆ ಕೇವಲ 4% ರಿಯಾಯಿತಿ ಬಡ್ಡಿ ದರವನ್ನು ನಿಗದಿಪಡಿಸಲಾಗಿದೆ (ಉಳಿದ ಬಡ್ಡಿಯನ್ನು ಸರ್ಕಾರವೇ ಭರಿಸುತ್ತದೆ). ಉದ್ಯಮದ ಸಂಪೂರ್ಣ ಮಾಲೀಕತ್ವವು ಎಸ್ಟಿ ಸಮುದಾಯದವರದ್ದೇ ಆಗಿರಬೇಕು ಎಂಬ ಷರತ್ತಿನೊಂದಿಗೆ, ಪಡೆದ ಸಾಲವನ್ನು 5 ವರ್ಷಗಳ ಅವಧಿಯಲ್ಲಿ ಮರುಪಾವತಿಸಲು ಅವಕಾಶವಿದ್ದು, ಇದು ಸಮುದಾಯದ ಯುವ ಉದ್ಯಮಿಗಳು ಕಡಿಮೆ ಬಂಡವಾಳ ವೆಚ್ಚದಲ್ಲಿ ಸ್ವಾವಲಂಬಿಗಳಾಗಲು ಅತ್ಯುತ್ತಮ ವೇದಿಕೆಯಾಗಿದೆ
ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಕೈಗೆಟುಕುವ ದರದಲ್ಲಿ ಬಂಡವಾಳ ಒದಗಿಸುವುದು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಉತ್ತೇಜಿಸುವುದು ಮತ್ತು ಸೇವಾ ವಲಯಗಳಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ
ಬಡ್ಡಿ ದರದ ರಿಯಾಯಿತಿ: ಈ ಯೋಜನೆಯಡಿ ಆಯ್ಕೆಯಾದ ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಕೇವಲ 4% ರಷ್ಟು ರಿಯಾಯಿತಿ ಬಡ್ಡಿ ದರದಲ್ಲಿ ಸಾಲದ ಸೌಲಭ್ಯ ದೊರೆಯುತ್ತದೆ. ಬ್ಯಾಂಕಿನ ಅಸಲಿ ಬಡ್ಡಿ ದರ ಮತ್ತು ಈ 4% ನಡುವಿನ ವ್ಯತ್ಯಾಸದ ಮೊತ್ತವನ್ನು ಸರ್ಕಾರವೇ ಬಡ್ಡಿ ಸಹಾಯಧನದ ರೂಪದಲ್ಲಿ ಭರಿಸುತ್ತದೆ.
ಗರಿಷ್ಠ ಸಾಲದ ಮಿತಿ: ಉದ್ಯಮಿಗಳು ತಮ್ಮ ಘಟಕಗಳ ಸ್ಥಾಪನೆ ಅಥವಾ ವಿಸ್ತರಣೆಗಾಗಿ ಈ ಯೋಜನೆಯ ಅಡಿಯಲ್ಲಿ ಗರಿಷ್ಠ 1.00 ಕೋಟಿ ರೂಪಾಯಿಗಳವರೆಗೆ ಸಾಲವನ್ನು ಪಡೆಯಲು ಅವಕಾಶವಿದೆ.
ಸಾಲ ಮರುಪಾವತಿಯ ಕಾಲಾವಕಾಶ: ಪಡೆದ ಸಾಲವನ್ನು ಮರುಪಾವತಿ ಮಾಡಲು ಉದ್ಯಮಿಗಳಿಗೆ 5 ವರ್ಷಗಳ ಕಾಲಾವಧಿಯನ್ನು ನಿಗದಿಪಡಿಸಲಾಗಿದೆ. ಈ ಅವಧಿಯಲ್ಲಿ ನಿಗದಿತ ಕಂತುಗಳ ಮೂಲಕ ಸಾಲ ತೀರಿಸಬಹುದಾಗಿದೆ.
ಸಾಲ ಒದಗಿಸುವ ಹಣಕಾಸು ಸಂಸ್ಥೆಗಳು: ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಉದ್ಯಮಿಗಳು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ , ಯಾವುದಾದರು ರಾಷ್ಟ್ರೀಕೃತ ಬ್ಯಾಂಕ್ಗಳು, ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ಗಳು ಅಥವಾ ಅಪೆಕ್ಸ್ ಸಹಕಾರಿ ಬ್ಯಾಂಕ್ಗಳಿಂದ ಸಾಲವನ್ನು ಪಡೆಯಬಹುದಾಗಿದೆ.
ಕೈಗಾರಿಕಾ ವಲಯ: ಆಹಾರ ಸಂಸ್ಕರಣಾ ಘಟಕಗಳು, ಜವಳಿ ಉದ್ಯಮ, ಸಿದ್ಧ ಉಡುಪುಗಳ ತಯಾರಿಕೆ, ಎಂಜಿನಿಯರಿಂಗ್ ವರ್ಕ್ಶಾಪ್ಗಳು ಮತ್ತು ಆಟೋಮೊಬೈಲ್ ಬಿಡಿಭಾಗಗಳ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಈ ಯೋಜನೆಯಡಿ ಸಾಲ ಪಡೆಯಬಹುದು.
ಮಾಹಿತಿ ತಂತ್ರಜ್ಞಾನ ಮತ್ತು ಸೇವಾ ವಲಯ: ಸಾಫ್ಟ್ವೇರ್ ಅಭಿವೃದ್ಧಿ ಕೇಂದ್ರಗಳು, ಐಟಿ ಆಧಾರಿತ ಸೇವೆಗಳು ಹಾಗೂ ಈವೆಂಟ್ ಮ್ಯಾನೇಜ್ಮೆಂಟ್ನಂತಹ ಸೇವಾ ಆಧಾರಿತ ಉದ್ಯಮಗಳಿಗೆ ಸರ್ಕಾರವು ಪ್ರೋತ್ಸಾಹ ನೀಡುತ್ತದೆ.
ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳು: 2021-22ನೇ ಸಾಲಿನಿಂದ ಈ ಯೋಜನೆಯನ್ನು ವಿಸ್ತರಿಸಲಾಗಿದ್ದು, ಇದರ ಅಡಿಯಲ್ಲಿ ಸ್ವಂತ ಮಳಿಗೆ, ಪ್ರಮುಖ ಕಂಪನಿಗಳ ಡೀಲರ್ಶಿಪ್, ಫ್ರಾಂಚೈಸಿಗಳು ಮತ್ತು ಹೋಟೆಲ್ ಉದ್ಯಮಗಳನ್ನು ಆರಂಭಿಸಲು ಅವಕಾಶ ಕಲ್ಪಿಸಲಾಗಿದೆ.
ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರ: ಸುಸಜ್ಜಿತ ಆಸ್ಪತ್ರೆಗಳು, ನರ್ಸಿಂಗ್ ಹೋಮ್ಗಳು, ಸ್ಕ್ಯಾನಿಂಗ್ ಅಥವಾ ಡಯಾಗ್ನೋಸ್ಟಿಕ್ ಸೆಂಟರ್ಗಳು, ದಂತ ಚಿಕಿತ್ಸಾಲಯ ಮತ್ತು ಕಣ್ಣಿನ ಆಸ್ಪತ್ರೆಗಳನ್ನು ತೆರೆಯಲು ಹಾಗೂ ಆಧುನಿಕ ವೈದ್ಯಕೀಯ ಉಪಕರಣಗಳ ಖರೀದಿಗೆ ಸಹಾಯಧನ ಲಭ್ಯವಿದೆ.
ಪ್ರವಾಸೋದ್ಯಮ ಮತ್ತು ಆತಿಥ್ಯ ವಲಯ: ಪ್ರವಾಸಿಗರನ್ನು ಸೆಳೆಯಲು ಹೋಟೆಲ್, ರೆಸಾರ್ಟ್, ಕ್ಯಾಟರಿಂಗ್ ಸೇವೆಗಳು, ಅಮ್ಯೂಸ್ಮೆಂಟ್ ಪಾರ್ಕ್ಗಳು ಮತ್ತು ಪ್ರವಾಸಿ ಏಜೆನ್ಸಿಗಳನ್ನು ನಡೆಸಲು ಆಸಕ್ತಿಯಿರುವ ಉದ್ಯಮಿಗಳು ಈ ಯೋಜನೆಯ ಲಾಭ ಪಡೆಯಬಹುದು.
ಉದ್ಯಮವು ಸಂಪೂರ್ಣವಾಗಿ ಪರಿಶಿಷ್ಟ ಪಂಗಡದ ವ್ಯಕ್ತಿಗಳ ಮಾಲೀಕತ್ವದಲ್ಲಿರಬೇಕು. ಪಾಲುದಾರಿಕೆ ಸಂಸ್ಥೆಯಾಗಿದ್ದರೆ, ಎಲ್ಲಾ ಪಾಲುದಾರರು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದವರಾಗಿರಬೇಕು.
ಅರ್ಜಿದಾರರು ಈ ಹಿಂದೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಥವಾ ಯಾವುದೇ ಬ್ಯಾಂಕ್ಗಳಲ್ಲಿ ಸಾಲ ಪಡೆದು ಮರುಪಾವತಿ ಮಾಡದೆ ಸುಸ್ತಿದಾರರಾಗಿರಬಾರದು.
ಈ ಹಿಂದೆ ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಬಡ್ಡಿ ಸಹಾಯಧನ ಯೋಜನೆಯಡಿ ಪ್ರಯೋಜನ ಪಡೆದಿದ್ದರೆ ಈ ಯೋಜನೆಗೆ ಅರ್ಹರಲ್ಲ.
ಹಂತ 1: ನಿಮ್ಮ ಜಿಲ್ಲೆಯ ಹತ್ತಿರದ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಶಾಖಾ ಕಚೇರಿ ಅಥವಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡಿ.
ಹಂತ 2: ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಎಲ್ಲಾ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ.
ಹಂತ 3: ಅಗತ್ಯವಿರುವ ದಾಖಲೆಗಳ ಸ್ವಯಂ ದೃಢೀಕರಿಸಿದ ಪ್ರತಿಗಳನ್ನು ಲಗತ್ತಿಸಿ.
ಹಂತ 4: ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ಕಚೇರಿಯಲ್ಲಿ ಸಲ್ಲಿಸಿ ಮತ್ತು ಸ್ವೀಕೃತಿ ಪತ್ರ ಪಡೆಯಿರಿ.
ದಾಖಲೆಗಳು
ಅರ್ಜಿದಾರರ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಫೋಟೋ.
ಜಾತಿ ಪ್ರಮಾಣಪತ್ರ (SC/ST ಧೃಢೀಕರಣ).
ಬಯೋ-ಡೇಟಾ ಮತ್ತು ನಿವ್ವಳ ಮೌಲ್ಯದ ಹೇಳಿಕೆ.
ನಿಗದಿತ ನಮೂನೆಯಲ್ಲಿ ಪ್ರಮಾಣಪತ್ರ.
ಬ್ಯಾಂಕ್ ಖಾತೆಯ ವಿವರಗಳು.
ಹೆಚ್ಚಿನ ಮಾಹಿತಿಗಾಗಿ ಅಥವಾ ಯಾವುದೇ ಸಂದೇಹಗಳಿದ್ದಲ್ಲಿ ನಿಮ್ಮ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಸಹಾಯವಾಣಿ ಸಂಖ್ಯೆ: 080-22261703 ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದು.
]]>ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು.

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ವರ್ಷ,ಋುತು,ವಿಪತ್ತಿನ ವಿಧ,ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಪಾವತಿ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ


ಫೆಬ್ರವರಿ 1 ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್ನಲ್ಲಿ 'ಪಿಎಂ ಕಿಸಾನ್' ಯೋಜನೆಯ ಸಹಾಯಧನ ವಾರ್ಷಿಕ 6,000 ರೂ. ನಿಂದ 8,000 ರೂ.ಗೆ ಏರಿಸುವ ಸಾಧ್ಯತೆಯಿದೆ. ಏರುತ್ತಿರುವ ಕೃಷಿ ವೆಚ್ಚಗಳಿಂದ ಕಂಗಾಲಾಗಿರುವ ರೈತರು ಈ ಹೆಚ್ಚಳವನ್ನು ನಿರೀಕ್ಷಿಸುತ್ತಿದ್ದಾರೆ. ವಿಶೇಷವಾಗಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ತವರು ರಾಜ್ಯವಾದ ಮಧ್ಯಪ್ರದೇಶದ ರೈತರು ಬೆಂಬಲ ಬೆಲೆ ಏರಿಕೆ, ಸಕಾಲಿಕ ವಿಮೆ ಮತ್ತು ಸಾಲ ಮನ್ನಾಗಾಗಿ ಆಗ್ರಹಿಸುತ್ತಿದ್ದಾರೆ.
ಮುಂಬರುವ ಕೇಂದ್ರ ಬಜೆಟ್ ಅಧಿವೇಶನಕ್ಕೆ ದಿನಗಣನೆ ಆರಂಭವಾಗಿದೆ. ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿರುವ ಬಜೆಟ್ ಮೇಲೆ ದೇಶದ ಅನ್ನದಾತರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ವಿಶೇಷವಾಗಿ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ' ಯೋಜನೆಯಡಿ ರೈತರಿಗೆ ನೀಡಲಾಗುವ ವಾರ್ಷಿಕ ಸಹಾಯಧನವನ್ನು ಹೆಚ್ಚಿಸಲಾಗುತ್ತದೆಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.
ಪ್ರಸ್ತುತ ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕ 6,000 ರೂ. ಸಹಾಯಧನವನ್ನು ಮೂರು ಕಂತುಗಳಲ್ಲಿ (ತಲಾ 2,000 ರೂ.) ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತಿದೆ. ಆದರೆ, ಏರುತ್ತಿರುವ ಬೆಲೆಗಳು ಮತ್ತು ಕೃಷಿ ವೆಚ್ಚಗಳ ಹಿನ್ನೆಲೆಯಲ್ಲಿ ಈ ಮೊತ್ತ ಸಾಲುತ್ತಿಲ್ಲ ಎಂಬುದು ರೈತ ಸಂಘಟನೆಗಳ ವಾದ. ಹೀಗಾಗಿ, ಈ ಬಾರಿಯ ಬಜೆಟ್ನಲ್ಲಿ ಈ ಮೊತ್ತವನ್ನು ವಾರ್ಷಿಕ 8,000 ರೂ. ಗಳಿಗೆ ಹೆಚ್ಚಿಸುವಂತೆ ಬಲವಾದ ಬೇಡಿಕೆ ಕೇಳಿಬಂದಿದೆ.
ಸರ್ಕಾರದಿಂದ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಹೊರಬೀಳದಿದ್ದರೂ, ಬಜೆಟ್ನಲ್ಲಿ ಈ ಬಗ್ಗೆ ಸಿಹಿ ಸುದ್ದಿ ಸಿಗಬಹುದು ಎಂಬ ನಿರೀಕ್ಷೆ ರೈತರಲ್ಲಿದೆ. 2018 ರಲ್ಲಿ ಆರಂಭವಾದ ಈ ಯೋಜನೆ ಕೋಟ್ಯಂತರ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆಸರೆಯಾಗಿದೆ.
ಇತ್ತೀಚಿನ ವರ್ಷಗಳಲ್ಲಿ ರಸಗೊಬ್ಬರ, ಬೀಜ, ಕೀಟನಾಶಕ, ಡೀಸೆಲ್ ಮತ್ತು ಕೃಷಿ ಉಪಕರಣಗಳ ಬೆಲೆ ಗಗನಕ್ಕೇರಿದೆ. ಕೇವಲ 6,000 ರೂ. ರೈತರಿಗೆ ಯಾವ ಮೂಲೆಗೂ ಸಾಲುತ್ತಿಲ್ಲ. ಹೀಗಾಘಿ ಸಹಾಯಧನ ಹೆಚ್ಚಾದರೆ, ರೈತರು ಕೃಷಿಯಲ್ಲಿ ಹೂಡಿಕೆ ಮಾಡಲು ಮತ್ತು ಸಾಲದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂಬುದು ತಜ್ಞರ ಅಭಿಪ್ರಾಯ.
ದೇಶದ ಕೃಷಿ ಭೂಪಟದಲ್ಲಿ ಮಧ್ಯಪ್ರದೇಶಕ್ಕೆ ಪ್ರಮುಖ ಸ್ಥಾನವಿದೆ. ಗೋಧಿ, ಸೋಯಾಬಿನ್, ಬೇಳೆಕಾಳು ಮತ್ತು ಮಸಾಲೆ ಪದಾರ್ಥಗಳ ಉತ್ಪಾದನೆಯಲ್ಲಿ ಅಗ್ರಗಣ್ಯವಾಗಿರುವ ಈ ರಾಜ್ಯದ ರೈತರು ಬಜೆಟ್ ಮೇಲೆ ಹೆಚ್ಚಿನ ಭರವಸೆ ಇಟ್ಟಿದ್ದಾರೆ. ಅದಕ್ಕೆ ಮತ್ತೊಂದು ಕಾರಣವೆಂದರೆ, ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರು ಇದೇ ರಾಜ್ಯದ ಸೆಹೋರ್ ಜಿಲ್ಲೆಯವರು.
ಸೆಹೋರ್ ಜಿಲ್ಲೆಯು 'ಶರಬತಿ ಗೋಧಿ'ಗೆ ಹೆಸರುವಾಸಿ. ಆದರೆ ಇಲ್ಲಿನ ರೈತರು ತಮ್ಮ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿದ್ದಾರೆ. "ನಮ್ಮ ಬೆಳೆಗಳಿಗೆ ಬೆಂಬಲ ಬೆಲೆ (ಎಂಎಸ್ಪಿ) ಸಿಗುತ್ತಿಲ್ಲ. ಈರುಳ್ಳಿ ಬೆಲೆ ಕುಸಿದು ಹೊಲದಲ್ಲೇ ಕೊಳೆಯುತ್ತಿದೆ. ವಿಮೆ ಹಣ ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ," ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಹೀಗಾಗಿ ನಮ್ಮದೇ ರಾಜ್ಯದ ಸಚಿವರು ಬೇಡಿಕೆ ಈಡೇರಿಸಬಹುದು ಎಂಬ ನಿರೀಕ್ಷೆಯಲ್ಲಿ ಇಲ್ಲಿನ ಅನ್ನದಾತರಿದ್ದಾರೆ.
ಮಧ್ಯಪ್ರದೇಶ ಸರ್ಕಾರ 2026 ಅನ್ನು 'ರೈತ ಕಲ್ಯಾಣ ವರ್ಷ' ಎಂದು ಘೋಷಿಸಿದ್ದರೂ, ಯೋಜನೆಗಳು ಕೇವಲ ಕಾಗದದ ಮೇಲಿರದೆ ರೈತರ ಕೈ ಸೇರಬೇಕು ಎಂಬುದು ಅನ್ನದಾತರ ಒತ್ತಾಯವಾಗಿದೆ. ಬಜೆಟ್ ಕೇವಲ ಅಂಕಿ-ಅಂಶಗಳಾಗದೆ, ತಮ್ಮ ಬದುಕಿನ ಬವಣೆ ನೀಗಿಸುವ ಸಂಜೀವಿನಿಯಾಗಲಿ ಎಂದು ಇವರು ಕಾಯುತ್ತಿದ್ದಾರೆ.
]]>
ತಾಂತ್ರಿಕತೆಯು ಮುಗಿಲೆತ್ತರಕ್ಕೇರುತ್ತಿರುವ ಈ ಕಾಲದಲ್ಲಿ, ಡ್ರೋನ್ ಪೈಲಟ್ಗಳ ಅವಶ್ಯಕತೆ ಗಣನೀಯವಾಗಿ ಹೆಚ್ಚಿದೆ. ಈ ನಿಟ್ಟಿನಲ್ಲಿ, ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಯ ಕೃಷಿ ಪದವೀಧರರಿಗಾಗಿ ಉಚಿತ ಡ್ರೋನ್ ಪೈಲಟ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. 15 ದಿನಗಳ ವಸತಿಯುತ ಈ ತರಬೇತಿಯು ಡ್ರೋನ್ ಹಾರಾಟದ ಕೌಶಲ್ಯ, ಸಂಬಂಧಿತ ನಿಯಮಗಳು ಮತ್ತು ಕೃಷಿಯಲ್ಲಿ ಡ್ರೋನ್ಗಳ ನವೀನ ಉಪಯೋಗಗಳ ಬಗ್ಗೆ ಸಮಗ್ರ ಜ್ಞಾನವನ್ನು ನೀಡುತ್ತದೆ. ಆಸಕ್ತರು ಮಾರ್ಚ್ 31, 2026 ರೊಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಇದು ಕೃಷಿ ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶಗಳನ್ನು ವಿಸ್ತರಿಸುವ ಒಂದು ಮಹತ್ವದ ಹೆಜ್ಜೆಯಾಗಿದೆ.
ಇಂದಿನ ತಾಂತ್ರಿಕ ಯುಗದಲ್ಲಿ ಡ್ರೋನ್ ಬಳಕೆ ಕೇವಲ ಮನೋರಂಜನೆಗೆ ಸೀಮಿತವಾಗಿಲ್ಲ. ಕೃಷಿ, ಸರ್ವೇಕ್ಷಣೆ, ರಕ್ಷಣೆ ಮತ್ತು ವಿತರಣಾ ಕ್ಷೇತ್ರಗಳಲ್ಲಿ ಡ್ರೋನ್ ಪೈಲಟ್ಗಳಿಗೆ ಭಾರೀ ಬೇಡಿಕೆ ಸೃಷ್ಟಿಯಾಗಿದೆ. ಇದನ್ನು ಮನಗಂಡು ಕರ್ನಾಟಕ ಸರ್ಕಾರ ಡ್ರೋನ್ ತರಬೇತಿ ಯೋಜನೆಯನ್ನು ಆರಂಭಿಸಿದೆ. ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ವತಿಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗಾಗಿ ಉಚಿತ ಸುಧಾರಿತ ಡ್ರೋನ್ ಪೈಲಟ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡ್ರೋನ್ ತರಬೇತಿ ಪಡೆಯುವುದು ಹೇಗೆ? ಅರ್ಹತೆಗಳೇನು? ಅರ್ಜಿ ಸಲ್ಲಿಕೆ ಹೇಗೆ? ಇತ್ಯಾದಿ ಮಾಹಿತಿಗಳನ್ನು ತಿಳಿಯೋಣ.
ಇದು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ಹಮ್ಮಿಕೊಂಡಿರುವ 'ಉಚಿತ ಸುಧಾರಿತ ಡ್ರೋನ್ ಪೈಲಟ್ ತರಬೇತಿ' ಕಾರ್ಯಕ್ರಮವಾಗಿದೆ. ಮುಖ್ಯವಾಗಿ ಪರಿಶಿಷ್ಟ ಜಾತಿಯ ಕೃಷಿ ಪದವೀಧರರು ಅಥವಾ ಕೃಷಿ ವಿಜ್ಞಾನ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿರುವ ಈ ಯೋಜನೆಯು, ಅಭ್ಯರ್ಥಿಗಳಿಗೆ 15 ದಿನಗಳ ಕಾಲ ಉಚಿತ ವಸತಿಯುತ ತರಬೇತಿಯನ್ನು ನೀಡುತ್ತದೆ. ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ನಡೆಯುವ ಈ ತರಬೇತಿಯಲ್ಲಿ ಡ್ರೋನ್ ಹಾರಾಟದ ಪ್ರಾಯೋಗಿಕ ಜ್ಞಾನ, ಡಿಜಿಸಿಎ ನಿಯಮಗಳು ಮತ್ತು ಕೃಷಿ ಕ್ಷೇತ್ರದಲ್ಲಿ ಡ್ರೋನ್ ಅನ್ವಯಿಕೆಗಳ ಬಗ್ಗೆ (ಕೀಟನಾಶಕ ಸಿಂಪಡಣೆ, ಸಮೀಕ್ಷೆ ಇತ್ಯಾದಿ) ಸಮಗ್ರ ಮಾಹಿತಿ ನೀಡಲಾಗುತ್ತದೆ. ಅರ್ಹ ಯುವಜನತೆಯನ್ನು ತಾಂತ್ರಿಕವಾಗಿ ಸಬಲಗೊಳಿಸಿ, ಬೆಳೆಯುತ್ತಿರುವ ಡ್ರೋನ್ ತಂತ್ರಜ್ಞಾನದ ಮಾರುಕಟ್ಟೆಯಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಅಂತಿಮ ದಿನಾಂಕ: ಈ ಉಚಿತ ಸುಧಾರಿತ ಡ್ರೋನ್ ಪೈಲಟ್ ತರಬೇತಿಯನ್ನು ಪಡೆಯಲು ಆಸಕ್ತಿ ಹೊಂದಿರುವ ಮತ್ತು ಅರ್ಹತೆ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 2026ರ ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ಅಭ್ಯರ್ಥಿಗಳು ಕೊನೆಯ ದಿನದವರೆಗೆ ಕಾಯದೆ ಮುಂಚಿತವಾಗಿಯೇ ಅರ್ಜಿಯನ್ನು ಸಲ್ಲಿಸುವುದು ಉತ್ತಮ.
]]>
ಕರ್ನಾಟಕ ಸರ್ಕಾರವು ಭೂ ಒಡೆತನ ಯೋಜನೆಯಲ್ಲಿ ಮಹತ್ವದ ಬದಲಾವಣೆ ತಂದಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭೂಹೀನ ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಭೂಮಿ ಒದಗಿಸಲು ಘಟಕ ವೆಚ್ಚವನ್ನು ಹೆಚ್ಚಿಸಲಾಗಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ 25 ಲಕ್ಷ ರೂ. ಹಾಗೂ ಇತರ ಜಿಲ್ಲೆಗಳಲ್ಲಿ 20 ಲಕ್ಷ ರೂ. ವೆಚ್ಚ ನಿಗದಿಪಡಿಸಲಾಗಿದೆ. ಶೇ.50 ಸಹಾಯಧನ ಹಾಗೂ ಶೇ.50 ಸಾಲ ನೀಡಲಾಗುತ್ತದೆ. ಇದರಿಂದ ಬಡವರು ಕೂಡ ಭೂಮಿ ಹೊಂದುವಂತಾಗುತ್ತದೆ.
ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭೂಹೀನ ಮಹಿಳಾ ಕೃಷಿ ಕಾರ್ಮಿಕರನ್ನು ಆರ್ಥಿಕವಾಗಿ ಸಬಲೀಕರಿಸಲು "ಭೂ ಒಡೆತನ ಯೋಜನೆ" ಅಡಿಯಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿದೆ. 2026ರ ಸಾಲಿನಲ್ಲಿ ಜಮೀನುಗಳ ಬೆಲೆ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು ಘಟಕ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಸರ್ಕಾರದ ಈ ಸೌಲಭ್ಯವನ್ನು ಬಳಸಿಕೊಂಡು ಬಡವರು ಕೂಡ ಸ್ವಂತ ಭೂಮಿಯನ್ನು ಹೊಂದಲು ಈ ಯೋಜನೆ ಅನುಕೂಲ ಮಾಡಿಕೊಡಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ದೊರೆಯುವ ಪರಿಷ್ಕೃತ ಸಹಾಯಧನದ ಮೊತ್ತ ಎಷ್ಟು? ಪ್ರಯೋಜನಗಳೇನು? ಅರ್ಜಿ ಸಲ್ಲಿಕೆ ಹೇಗೆ? ಇತ್ಯಾದಿ ಮಾಹಿತಿಗಳನ್ನು ತಿಳಿಯೋಣ.
ಕರ್ನಾಟಕ ಸರ್ಕಾರದ ಭೂ ಒಡೆತನ ಯೋಜನೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭೂಹೀನ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಭೂಮಿಯನ್ನು ಒದಗಿಸುವ ಪ್ರಮುಖ ಯೋಜನೆಯಾಗಿದ್ದು, 2026ರ ಸಾಲಿನಲ್ಲಿ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಘಟಕ ವೆಚ್ಚವನ್ನು 25.00 ಲಕ್ಷ ರೂ.ಗೆ ಹಾಗೂ ರಾಜ್ಯದ ಇತರೆ ಜಿಲ್ಲೆಗಳಲ್ಲಿ 20.00 ಲಕ್ಷ ರೂ.ಗೆ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ ಒಟ್ಟು ವೆಚ್ಚದ 50% ಸಹಾಯಧನ ಹಾಗೂ ಉಳಿದ 50% ಅನ್ನು ವಾರ್ಷಿಕ 6% ಬಡ್ಡಿ ದರದಲ್ಲಿ ಸಾಲವಾಗಿ ನೀಡಲಾಗುತ್ತದೆ. ಇದರ ಮೂಲಕ ಫಲಾನುಭವಿಗಳು ಕನಿಷ್ಠ 2 ಎಕರೆ ಖುಷ್ಕಿ ಅಥವಾ 1 ಎಕರೆ ತರಿ ಭೂಮಿಯನ್ನು ಖರೀದಿಸಿ ತಮ್ಮ ಹೆಸರಿನಲ್ಲಿ ನೋಂದಾಯಿಸಿಕೊಳ್ಳಬಹುದು.
ಗ್ರಾಮೀಣ ಭಾಗದ ಭೂಹೀನ ದಲಿತ ಮತ್ತು ಆದಿವಾಸಿ ಮಹಿಳೆಯರಿಗೆ ಕೃಷಿ ಭೂಮಿಯನ್ನು ಕೊಡಿಸುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಜಮೀನನ್ನು ಕುಟುಂಬದ ಹಿರಿಯ ಮಹಿಳೆಯ ಹೆಸರಿನಲ್ಲಿಯೇ ನೇರವಾಗಿ ನೋಂದಣಿ ಮಾಡಲಾಗುತ್ತದೆ.
]]>
ಕುರಿ ಸಾಕಾಣಿಕೆ ಈಗ ಲಾಭದಾಯಕ ಉದ್ಯಮವಾಗಿದೆ. ಕುರಿ ಸಾಕಣೆ ಮಾಡುವ ಯುವಕರನ್ನು ಪ್ರೋತ್ಸಾಹಿಸಲು ಕರ್ನಾಟಕ ಸರ್ಕಾರ 'ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ' ಜಾರಿಗೆ ತಂದಿದೆ. ಈ ಯೋಜನೆಯಡಿ 20 ಕುರಿ/ಮೇಕೆ ಮತ್ತು 1 ಟಗರು/ಹೋತದ ಘಟಕ ನೀಡಲಾಗುತ್ತದೆ. ಒಟ್ಟು 1,75,000 ರೂ. ವೆಚ್ಚದಲ್ಲಿ 50% ಸಾಲ, 25% ಸಹಾಯಧನ, 25% ಫಲಾನುಭವಿ ವಂತಿಕೆ ಇರುತ್ತದೆ. ಗ್ರಾಮೀಣ ಯುವಕರಿಗೆ ಉದ್ಯೋಗಾವಕಾಶ ನೀಡಲು ಇದು ಸಹಕಾರಿ. ಈ ಯೋಜನೆಯ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಹಿಂದೊಮ್ಮೆ ಒಂದು ಸಮುದಾಯಕ್ಕಷ್ಟೇ ಸೀಮಿತವಾಗಿದ್ದ ಕುರಿ ಸಾಕಾಣಿಕೆಯು ಇಂದು ಒಂದು ವೃತ್ತಿಪರ ಉದ್ಯೋಗವಾಗಿ ಮಾರ್ಪಾಟ್ಟಿದೆ. ಹೆಚ್ಚಿನ ಯುವಕರು ಕುರಿ ಸಾಕಾಣಿಕೆಯತ್ತ ಆಕರ್ಷಿತರಾಗುತ್ತಿದ್ದಾರೆ. ಕರ್ನಾಟಕ ಸರ್ಕಾರವು ರಾಜ್ಯದ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಜೀವನಮಟ್ಟವನ್ನು ಸುಧಾರಿಸಲು ಮತ್ತು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ' ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆರ್ಥಿಕವಾಗಿ ಹಿಂದುಳಿದ ಸದಸ್ಯರಿಗೆ ಸುಸ್ಥಿರ ಜೀವನೋಪಾಯವನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯು ಕರ್ನಾಟಕ ಸರ್ಕಾರದ ಪಶುಸಂಗೋಪನಾ ಇಲಾಖೆಯ ಒಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ರಾಜ್ಯದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆರ್ಥಿಕವಾಗಿ ಹಿಂದುಳಿದ ಸದಸ್ಯರಿಗೆ ಸುಸ್ಥಿರ ಜೀವನೋಪಾಯವನ್ನು ಕಲ್ಪಿಸುವ ಉದ್ದೇಶ ಹೊಂದಿದೆ. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ಒಟ್ಟು 1,75,000 ರೂ.ವೆಚ್ಚದಲ್ಲಿ 20 ಕುರಿ/ಮೇಕೆ ಮತ್ತು 1 ಟಗರು/ಹೋತವನ್ನೊಳಗೊಂಡ (20+1) ಘಟಕವನ್ನು ನೀಡಲಾಗುತ್ತದೆ. ಈ ಮೊತ್ತದಲ್ಲಿ ಶೇ. 50 ರಷ್ಟು ಎನ್.ಸಿ.ಡಿ.ಸಿ ವತಿಯಿಂದ ಸಾಲ, ಶೇ. 25 ರಷ್ಟು ರಾಜ್ಯ ಸರ್ಕಾರದ ಸಹಾಯಧನ ಮತ್ತು ಉಳಿದ ಶೇ. 25 ರಷ್ಟು ಫಲಾನುಭವಿಯ ವಂತಿಕೆಯಾಗಿರುತ್ತದೆ.

ಈ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಒಂದು ಸಣ್ಣ ಪ್ರಮಾಣದ ಕುರಿ ಅಥವಾ ಮೇಕೆ ಸಾಕಾಣಿಕೆ ಘಟಕವನ್ನು ಮಂಜೂರು ಮಾಡಲಾಗುತ್ತದೆ. ಈ ಘಟಕವು ಒಟ್ಟು 21 ಪ್ರಾಣಿಗಳನ್ನು ಒಳಗೊಂಡಿರುತ್ತದೆ, ಅದರಲ್ಲಿ 20 ಹೆಣ್ಣು ಕುರಿ/ಮೇಕೆಗಳು ಮತ್ತು ಸಂತಾನೋತ್ಪತ್ತಿಗಾಗಿ 1 ಗಂಡು ಟಗರು ಅಥವಾ ಹೋತವನ್ನು ನೀಡಲಾಗುತ್ತದೆ. ಇದನ್ನು ವೈಜ್ಞಾನಿಕವಾಗಿ ಒಂದು ಲಾಭದಾಯಕ ಸಾಕಾಣಿಕಾ ಘಟಕವೆಂದು ಪರಿಗಣಿಸಲಾಗುತ್ತದೆ.
ಒಂದು ಪೂರ್ಣ ಪ್ರಮಾಣದ ಘಟಕವನ್ನು ಸ್ಥಾಪಿಸಲು ತಗಲುವ ಒಟ್ಟು ಮೊತ್ತವನ್ನು 1,75,000 ರೂ. (ಒಂದು ಲಕ್ಷದ ಎಪ್ಪತ್ತೈದು ಸಾವಿರ ರೂಪಾಯಿಗಳು) ಎಂದು ನಿಗದಿಪಡಿಸಲಾಗಿದೆ. ಈ ಮೊತ್ತವು ಪ್ರಾಣಿಗಳ ಖರೀದಿ ಮತ್ತು ಇತರ ಪ್ರಾರಂಭಿಕ ವೆಚ್ಚಗಳನ್ನು ಒಳಗೊಂಡಿರುತ್ತದೆ.
ಪ್ರಸ್ತುತ 2026ರ ಆರಂಭದ ಮಾಹಿತಿಯಂತೆ, ಈ ಯೋಜನೆಯು ರಾಜ್ಯಾದ್ಯಂತ ಜಾರಿಯಲ್ಲಿದ್ದರೂ ಕೆಲವು ಜಿಲ್ಲೆಗಳಲ್ಲಿ ಅನುದಾನದ ಬಿಡುಗಡೆ ವಿಳಂಬವಾಗಿರುವ ವರದಿಗಳಿವೆ. ಕಳೆದ ವರ್ಷಗಳಲ್ಲಿ ಸಾವಿರಾರು ರೈತರು ಇದರ ಲಾಭ ಪಡೆದಿದ್ದಾರೆ. ಪ್ರಸ್ತುತ ಸಾಲಿನ ಹೊಸ ಅರ್ಜಿ ಸಲ್ಲಿಕೆ ಮತ್ತು ಅನುದಾನದ ಲಭ್ಯತೆಯ ಬಗ್ಗೆ ಮಾಹಿತಿ ಪಡೆಯಲು ರೈತರು ತಕ್ಷಣವೇ ತಮ್ಮ ಜಿಲ್ಲಾ ಪಶುಸಂಗೋಪನಾ ಕಚೇರಿಯನ್ನು ಸಂಪರ್ಕಿಸುವುದು ಸೂಕ್ತ.
ಸಲ್ಲಿಸಲಾದ ಅರ್ಜಿಗಳನ್ನು ಪರಿಶೀಲಿಸಲು ಜಿಲ್ಲಾ ಮಟ್ಟದಲ್ಲಿ ಒಂದು ಅಧಿಕೃತ ಸಮಿತಿಯನ್ನು ರಚಿಸಲಾಗಿರುತ್ತದೆ. ಈ ಸಮಿತಿಯು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ ಪಶುಸಂಗೋಪನಾ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕರು ಮತ್ತು ಲೀಡ್ ಬ್ಯಾಂಕ್ ಮ್ಯಾನೇಜರ್ಗಳು ಸದಸ್ಯರಾಗಿರುತ್ತಾರೆ. ಈ ಸಮಿತಿಯು ಅರ್ಜಿದಾರರ ಅರ್ಹತೆ ಮತ್ತು ಲಭ್ಯವಿರುವ ಗುರಿಯ ಆಧಾರದ ಮೇಲೆ ಅಂತಿಮವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡುತ್ತದೆ.
ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿಯ ನಂತರ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಜಾನುವಾರು ಸಾಕಾಣಿಕೆ ಪ್ರಮುಖ ಜೀವನಾಧಾರವಾಗಿದೆ. ರೈತರ ಆದಾಯ ಹೆಚ್ಚಿಸಲು, ಸುರಕ್ಷಿತ ಹಾಗೂ ಸ್ವಚ್ಛ ಪರಿಸರದಲ್ಲಿ ಜಾನುವಾರುಗಳ ಆರೋಗ್ಯಕರ ಬೆಳವಣಿಗೆಗೆ ನೆರವಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಸಬ್ಸಿಡಿ ಮತ್ತು ಸಹಾಯಧನ ಯೋಜನೆಗಳನ್ನು ಜಾರಿಗೆ ತಂದಿವೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಾನುವಾರುಗಳ ಶೆಡ್ಗಳ ನಿರ್ಮಾಣಕ್ಕೆ 57 ಸಾವಿರ ರೂ.ಗಳ ಸಾಯಧನವನ್ನು ಪಡೆಯಬಹುದಾಗಿದೆ. ಜೊತೆಗೆ ವೈಯಕ್ತಿಕ ಕಾಮಗಾರಿಗೆ ಸರ್ಕಾರದಿಂದ ಸಹಾಯಧನ ಲಭ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಶೆಡ್ಗಳ ನಿರ್ಮಾಣಕ್ಕೆ ಸಹಾಯಧನ ಪಡೆಯುವುದು ಹೇಗೆ ಎಂಬುದನ್ನು ತಿಳಿಯೋಣ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮುಖ್ಯ ಉದ್ದೇಶವು ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬದ ವಯಸ್ಕ ಸದಸ್ಯರಿಗೆ, ಅವರು ಕೌಶಲ್ಯರಹಿತ ದೈಹಿಕ ಕೆಲಸ ಮಾಡಲು ಸ್ವಯಂಸೇವಕರಾಗಿ ಮುಂದೆ ಬಂದಲ್ಲಿ, ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಖಾತರಿಯ ವೇತನದ ಉದ್ಯೋಗವನ್ನು ಒದಗಿಸುವುದಾಗಿದೆ. ಈ ಯೋಜನೆಯಡಿ ಒಟ್ಟು 266 ರೀತಿಯ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ಅವುಗಳಲ್ಲಿ ಶಾಲೆ ಕಾಂಪೌಂಡ್, ಆಟದ ಮೈದಾನ, ಶೌಚಾಲಯ, ಅಡುಗೆ ಕೋಣೆ, ಮಳೆ ನೀರು ಕೊಯ್ಲು, ಅರಣ್ಯೀಕರಣ, ಪೌಷ್ಟಿಕ ಕೈತೋಟ, ಕೆರೆ ಅಭಿವೃದ್ಧಿ, ರಾಜಕಾಲುವೆ, ಚರಂಡಿ, ಸಮುದಾಯ ಭವನ, ಗೋದಾಮು, ಸ್ವಚ್ಛ ಸಂಕೀರ್ಣ ಘಟಕ, ಬೂದು ನೀರು ನಿರ್ವಹಣೆ, ಸ್ಮಶಾನ ಅಭಿವೃದ್ಧಿ ಮುಂತಾದವುಗಳು ಸೇರಿವೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯು ಗ್ರಾಮೀಣ ಜನರ ಜೀವನ ಮಟ್ಟ ಸುಧಾರಿಸಲು ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳ ಮೂಲಕ ಆರ್ಥಿಕ ನೆರವು ನೀಡುತ್ತದೆ. ಇದರಲ್ಲಿ ದನ, ಕುರಿ, ಮೇಕೆ, ಮತ್ತು ಕೋಳಿ ಸಾಕಣೆಗಾಗಿ ವೈಯಕ್ತಿಕ ಶೆಡ್ ನಿರ್ಮಾಣಕ್ಕೆ ಸಹಾಯಧನವೂ ಲಭ್ಯವಿದೆ.
ನರೇಗಾ ಯೋಜನೆಯ ಲಾಭ ಪಡೆಯಲು ಮೊದಲು ಜಾಬ್ ಕಾರ್ಡ್ ಹೊಂದಿರಬೇಕು. ಇಲ್ಲದಿದ್ದರೆ, ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ನೀವು ಜಾನುವಾರುಗಳನ್ನು ಸಾಕುತ್ತಿದ್ದೀರಿ ಮತ್ತು ಶೆಡ್ ಅಗತ್ಯವಿದೆ ಎಂಬುದನ್ನು ದೃಢೀಕರಿಸಲು ಸ್ಥಳೀಯ ಪಶು ಚಿಕಿತ್ಸಾಲಯಕ್ಕೆ ಭೇಟಿ ನೀಡಿ, ದೃಢೀಕರಣ ಪತ್ರ ಪಡೆಯಬೇಕು. ಎಲ್ಲಾ ದಾಖಲೆಗಳೊಂದಿಗೆ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಅರ್ಜಿ ಪರಿಶೀಲನೆ ನಂತರ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ಆರಂಭಕ್ಕೆ ಅನುಮತಿ ಸಿಗುತ್ತದೆ.
ದಾಖಲೆಗಳು
ಹೈನುಗಾರಿಕೆಯ ಜೊತೆಗೆ ಕುರಿ ಮತ್ತು ಮೇಕೆ ಸಾಕಾಣಿಕೆಗೆ ಉತ್ತೇಜನ ನೀಡಲು ಕರ್ನಾಟಕ ಸರ್ಕಾರವು ಪ್ರಮುಖ ಯೋಜನೆಗಳನ್ನು ಜಾರಿಗೆ ತಂದಿದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿಯಲ್ಲಿ, ರಾಜ್ಯದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ 10 ಸಾವಿರ ಆರ್ಥಿಕವಾಗಿ ಹಿಂದುಳಿದ ಕುರಿಗಾಹಿ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು ಒದಗಿಸಲಾಗುತ್ತಿದೆ. ಯೋಜನೆಯಡಿ ಘಟಕದ ಒಟ್ಟು ವೆಚ್ಚ 1,75,000 ರೂ. ಆಗಿದೆ.
ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (NCDC) ಮತ್ತು ಭಾರತ ಸರ್ಕಾರದ ಸಹಕಾರ ಇಲಾಖೆಯಿಂದ ಶೇ. 50% ಸಾಲ ನೀಡಲಾಗುತ್ತದೆ. ರಾಜ್ಯ ಸರ್ಕಾರದಿಂದ ಶೇ. 25% ಸಹಾಯಧನ (ಸಬ್ಸಿಡಿ) ಲಭ್ಯವಾಗಲಿದ್ದು, ಫಲಾನುಭವಿ ಸದಸ್ಯರಿಂದ ಶೇ. 25% ವಂತಿಕೆ ಸಂಗ್ರಹಿಸಲಾಗುತ್ತದೆ.
ಈ ಯೋಜನೆಯಡಿ ಕರ್ನಾಟಕ ಕುರಿ ಮತ್ತು ಕುರಿ ಉಣ್ಣೆ ಅಭಿವೃದ್ಧಿ ನಿಗಮದಿಂದ ಕುರಿ/ಮೇಕೆ ಘಟಕ ವಿತರಣೆ ಮಾಡಲಾಗುತ್ತದೆ. ಯೋಜನೆ ಪ್ರಯೋಜನ ಪಡೆಯಲು ಫಲಾನುಭವಿಗಳು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST)ದವರಾಗಿರಬೇಕು. 6+1 ಕುರಿ/ಮೇಕೆ ಘಟಕ ವಿತರಣೆ ಮಾಡಲಾಗುವುದು. ಘಟಕದ ಮೊತ್ತ 45,000 ರೂ.ಗಳಾಗಿವೆ. ಇದರಲ್ಲಿ 90% ಸಹಾಯಧನ ನೀಡಲಾಗುತ್ತದೆ. ಅಂದರೆ 40,500 ರೂ. ಘಟಕದ ವೆಚ್ಚದಲ್ಲಿ ಫಲಾನುಭವಿ ವಂತಿಕೆ / ಬ್ಯಾಂಕ್ ಸಾಲದ ಮತ್ತ ಕೇವಲ 4,500 ರೂ.ಗಳಾಗಿವೆ. ಉಳಿದ ಮೊತ್ತವನ್ನು ಸರ್ಕಾರವೇ ಪಾವತಿ ಮಾಡಲಿದೆ.
]]>
ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ.
ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕೋಳಿ ಮರಿಗಳನ್ನು ವಿತರಿಸಲಾಗುವುದು. ಜೇನು, ಕುರಿ, ಹಸು ಸಾಕಾಣಿಕೆಗೆ ಪ್ರೋತ್ಸಾಹ ನೀಡುತ್ತಿರುವ ಮಾದರಿಯಲ್ಲಿ ನಾಟಿ ಕೋಳಿ ಸಾಕಾಣಿಕೆ ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬಡ ಕುಟುಂಬಗಳ ಮಹಿಳೆಯರಿಗೆ ತಲಾ 20 ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುವುದು. ಪ್ರತಿ ತಾಲೂಕಿಗೆ 106 ಫಲಾನುಭವಿಗಳಂತೆ ಗುರಿ ನಿಗದಿಪಡಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿನ ರೈತ ಮಹಿಳೆಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘದ ಮಹಿಳಾ ಸದಸ್ಯರಿಗೆ, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಯೋಜನೆಯಡಿ ಆದ್ಯತೆ ನೀಡಲಾಗುವುದು.
ನಾಟಿ ಕೋಳಿಗಳಿಗೆ ಪ್ರಸ್ತುತ ಬೇಡಿಕೆ ಹೆಚ್ಚಾಗಿದೆ. ಇವುಗಳ ಸಾಕಾಣೆಗೆ ಹೆಚ್ಚು ಖರ್ಚಾಗುವುದಿಲ್ಲ. ಮನೆ ಮುಂದೆ ಹಿತ್ತಲುಗಳಲ್ಲಿ ಕೋಳಿ ಸಾಕಬಹುದು, ವೆಚ್ಚಕ್ಕಿಂತ ಅಧಿಕ ಲಾಭ ಸಿಗುತ್ತದೆ. ಇವುಗಳ ಸಾಕಾಣಿಕೆಗೆ ಹೆಚ್ಚಿನ ಶ್ರಮ ಅಗತ್ಯವಿರುವುದಿಲ್ಲ. ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಆರ್ಥಿಕ ಸಬಲತೆ ಸಾಧಿಸಲು ತಲಾ 20 ಕೋಳಿ ಮರಿ ವಿತರಿಸಲಾಗುವುದು ಎಂದು ಹೇಳಲಾಗಿದೆ.
1 ಹಸು 1 ಎಮ್ಮೆ ಸಾಕಾಣಿೆಕೆಗೆ 65 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ-Dairy farming
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ
ಇಲಾಖೆ(Vetarnary department)ವತಿಯಿಂದ ಹಾಲು ಉತ್ಪಾದಕರ ಉತ್ತೇಜನ ಉಳಿಕೆ ಅನುದಾನದಡಿ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಒಂದು ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮಹಿಳೆಯರಿಗೆ ಶೇಕಡಾ 6ರ ಬಡ್ಡಿಯ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತ ಮಹಿಳೆಯರು ತಮ್ಮ ವ್ಯಾಪ್ತಿಯ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರ ಬ್ಯಾಂಕ್ಗಳಿಂದ ಹೈನುಗಾರಿಕೆಗೆ ಸಾಲ ಪಡೆದು ಸಕಾಲದಲ್ಲಿ ಮರುಪಾವತಿ ಮಾಡಿರಬೇಕು.
.
ಆಯ್ಕೆಯಾದ ಫಲಾನುಭವಿಗಳಿಂದ ಮುಂಗಡ ಹಣದ ಸ್ವೀಕೃತಿ ರಶೀದಿ ಪಡೆದು ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. 2024ರ ಏಪ್ರೀಲ್ 1ರಿಂದ ವಿವಿಧ ಬ್ಯಾಂಕ್ಗಳಿಂದ ಸಾಲ ಪಡೆದಿರುವ ರೈತ ಮಹಿಳೆಯರು ಸಂಬಂಧ ಪಟ್ಟ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಪಶುವೈದ್ಯ ಸಂಸ್ಥೆಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
Vetarnary department schemes 2024-ಪಶುಇಲಾಖೆಯಲ್ಲಿರುವ ಯೋಜನೆಗಳ ಪಟ್ಟಿ ಬಿಡುಗಡೆ,ಯಾವ ಯೋಜನೆಯಿಂದ ಯಾವ ಸೌಲಭ್ಯ ಸಿಗಲಿದೆ?
ಸಮಸ್ತೆ ರೈತ ಬಾಂಧವರೇ Krushirushi.in ಜಾಲತಾಣದ ಇಂದಿನ ಸಂಚಿಕೆಯಲ್ಲಿ ಪಶು ಸಂಗೋಪನಾ ಇಲಾಖೆಯಲ್ಲಿ ಯಾವೆಲ್ಲಾ ಯೋಜನೆಗಳಿವೆ ಎಂದು ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳೋಣ

ಹಾಲು ಉತ್ಪಾದಕರಿಗೆ ಪ್ರೋತ್ಸಾಹ
• ಹಾಲು ಉತ್ಪಾದಕ ಸದಸ್ಯರು ಸರಬರಾಜು ಮಾಡುವ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ 5/- ರಂತೆ ರೂ. 1103.22 ಕೋಟಿಗಳನ್ನು ವಿತರಿಸಲಾಗಿರುತ್ತದೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ ಎಮ್ಮೆ ಖರೀದಿಗೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು.
ದನದ ಶೆಡ್,ಕುರಿ ಶೆಡ್,ಕೋಳಿ ಶೆಡ್ ನಿರ್ಮಾಣಕ್ಕೆ ಎಲ್ಲಾ ವರ್ಗಗಳಿಗೂ 57,000 ರೂಪಾಯಿ ಸಹಾಯಧನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Cattle shed subsidy - https://krushirushi.in/Cattle-shed-subsidy-scheme-1630
ಲಸಿಕಾ ಕಾರ್ಯಕ್ರಮ
• ಕಾಲುಬಾಯಿ ರೋಗ, ಕಂದುರೋಗ, ಪಿ ಪಿ ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳುಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ಧ ಉಚಿತವಾಗಿ ಲಸಿಕೆ ಹಾಕಲಾಗುವುದು.
ನಾಟಿ ಕೋಳಿ ಮರಿಗಳ ವಿತರಣೆ
• ಮಹಿಳಾ ಸ್ವಸಹಾಯಕ ಸಂಘಗಳ ಆಯ್ದ ಗ್ರಾಮೀಣ ಮಹಿಳಾ ಸದಸ್ಯರಿಗೆ ತಲಾ 20 ಆರು ವಾರದ ನಾಟಿ ಕೋಳಿ ಮರಿಗಳನ್ನು 2650 ಫಲಾನುಭವಿಗಳಿಗೆ 53,000 ಕೋಳಿ ಮರಿಗಳನ್ನು ವಿತರಿಸಲಾಗುವುದು
ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ
* 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಗರಿಷ್ಠ 10000 ರೂ ಪರಿಹಾರಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ.20 ಕೋಟಿ ನಿಗಧಿಪಡಿಸಿದೆ.
ಕುರಿಗಾರರಿಗೆ ಅನುಗ್ರಹ ಕೊಡುಗೆ
• ಆಕಸ್ಮಿಕವಾಗಿ ಮರಣ ಹೊಂದಿದ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ರೂ. 5000.00 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ. 3500 ಪರಿಹಾರ ಧನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ರೂ. 20 ಕೋಟಿ ನಿಗಧಿಪಡಿಸಿದೆ.
ಲಿಂಗನಿರ್ಧರಿತ ವೀರ್ಯನಳಿಕೆ ಬಳಕೆ
* ಹೆಣ್ಣು ಕರುಗಳ ಸಂತತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯಲ್ಲಿ ಲಿಂಗನಿರ್ಧರಿತ ವೀರ್ಯನಳಿಕೆಗಳನ್ನು ಬಳಸಲಾಗುತ್ತಿದೆ.
ಸಂಚಾರಿ ಪಶು ಚಿಕಿತ್ಸಾ ಘಟಕ
ಸಂಚಾರಿ ಪಶುಚಿಕಿತ್ಸಾ ಘಟಕ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಪಶುವೈದ್ಯಕೀಯ ತುರ್ತು ಚಿಕಿತ್ಸೆ ಅವಶ್ಯವಿರುವ ಜಾನುವಾರು ಮಾಲೀಕರು "1962" ಸಂಚಾರಿ ಪಶುಚಿಕಿತ್ಸಾ ಸಹಾಯವಾಣಿಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ
- ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20+1 ಕುರಿ/ಮೇಕೆ ಘಟಕಗಳನ್ನು NCDC ಸಾಲ, ಸರ್ಕಾರದ ಸಹಾಯಧನದೊಂದಿಗೆ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ ಒಟ್ಟು 20,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಮೇವಿನ ಬೀಜವ ಕಿರು ಪೊಟ್ಟಣ ವಿತರಣೆ
- ಬರಗಾಲದ ನಿರ್ವಹಣೆಗೆ ರೂ.8.17 ಲಕ್ಷ ಮೇವಿನ ಬೀಜದ ಮಿನಿ ಕಿಟ್ಗಳನ್ನು ರೂ.22.00 ಕೋಟಿಗಳ ಅನುದಾನದಲ್ಲಿ ಉಚಿತವಾಗಿ ವಿತರಿಸಲಾಗಿದೆ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶೇ. 50% ಸಹಾಯಧನದೊಂದಿಗೆ ರೂ.6.10 ಕೋಟಿ ವೆಚ್ಚದಲ್ಲಿ 3666 ಫಲಾನುಭವಿಗಳಿಗೆ ವಿತರಿಸಲಾಗಿದೆ.
ತಾಲ್ಲೂಕೂಗಳಲ್ಲಿ ಪಾಲಿಕ್ಲಿನಿಕ್ ಸ್ಥಾಪನೆ
* ರಾಜ್ಯದ ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ರೂ 10 ಕೋಟಿ ಅನುದಾನದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.
ಪಶು ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣ
* 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
]]>
ನಿಮ್ಮ ಕನಸಿನ ಸ್ವಂತ ಉದ್ಯಮಕ್ಕೆ ಕರ್ನಾಟಕ ಸರ್ಕಾರದ ಮಹತ್ವದ ಕೊಡುಗೆ. ₹1 ಕೋಟಿ ವರೆಗಿನ ಸಾಲಕ್ಕೆ ಕೇವಲ ಶೇ. 4ರಷ್ಟು ಬಡ್ಡಿ ಮಾತ್ರ ನೀವು ಕಟ್ಟಬೇಕು. ಉಳಿದ ಬಡ್ಡಿಯನ್ನು ಸರ್ಕಾರವೇ ಭರಿಸುತ್ತದೆ. ಕೈಗಾರಿಕೆ, ಐಟಿ, ಆರೋಗ್ಯ, ಪ್ರವಾಸೋದ್ಯಮ ಹೀಗೆ ಯಾವುದೇ ಕ್ಷೇತ್ರದಲ್ಲಿ ನಿಮ್ಮ ಉದ್ಯಮವನ್ನು ಐದು ವರ್ಷದೊಳಗೆ ಸ್ಥಾಪಿಸಿ, ಬೆಳೆಸಿ. ಇದು ನಿಮ್ಮ ಆರ್ಥಿಕ ಸ್ವಾವಲಂಬನೆಗೆ ಸುವರ್ಣಾವಕಾಶ!
ಸ್ವಂತ ಉದ್ಯಮ ಆರಂಭಿಸಿ ಆರ್ಥಿಕವಾಗಿ ಸಬಲರಾಗಲು ನಿಮಗೊಂದು ಸುವರ್ಣಾವಕಾಶ. ಕರ್ನಾಟಕ ಸರ್ಕಾರವು ಪರಿಶಿಷ್ಟ ಪಂಗಡದ ಸಮುದಾಯದ ಅಭ್ಯರ್ಥಿಗಳನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಮತ್ತು ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಲು ವಿಶೇಷ ಬಡ್ಡಿ ಸಹಾಯಧನ ಯೋಜನೆಯನ್ನು ಜಾರಿಗೆ ತಂದಿದೆ. ನೀವು ಹೊಸ ಉದ್ಯಮವನ್ನು ಪ್ರಾರಂಭಿಸಲು ಬಯಸಿದ್ದರೆ ಅಥವಾ ಅಸ್ತಿತ್ವದಲ್ಲಿರುವ ಘಟಕವನ್ನು ವಿಸ್ತರಿಸಲು ಆಲೋಚಿಸುತ್ತಿದ್ದರೆ, ಈ ಯೋಜನೆಯು ನಿಮಗೆ ಭದ್ರ ಬುನಾದಿ ಒದಗಿಸಲಿದೆ. ಈ ಹಿನ್ನೆಲೆಯಲ್ಲಿ ಏನಿದು ಬಡ್ಡಿ ಸಹಾಯಧನ ಯೋಜನೆ? ಈ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ? ಪ್ರಯೋಜನಗಳು ಏನು ಎಂಬುದನ್ನು ತಿಳಿಯೋಣ.
ಕರ್ನಾಟಕ ಸರ್ಕಾರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ಪಂಗಡದ ಉದ್ಯಮಿಗಳ ಆರ್ಥಿಕ ಸಬಲೀಕರಣಕ್ಕಾಗಿ ಈ ವಿಶೇಷ ಬಡ್ಡಿ ಸಹಾಯಧನ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಎಂ.ಎಸ್.ಎಂ.ಇ ಘಟಕಗಳು, ಹೋಟೆಲ್, ಫ್ರಾಂಚೈಸಿ ಅಥವಾ ಡೀಲರ್ಶಿಪ್ಗಳಂತಹ ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಅಥವಾ ಅಸ್ತಿತ್ವದಲ್ಲಿರುವ ಘಟಕಗಳನ್ನು ಆಧುನೀಕರಿಸಲು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಥವಾ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ಗಳಿಂದ ಪಡೆಯುವ ಗರಿಷ್ಠ ರೂ. 1.00 ಕೋಟಿ ವರೆಗಿನ ಸಾಲಕ್ಕೆ ಕೇವಲ 4% ರಿಯಾಯಿತಿ ಬಡ್ಡಿ ದರವನ್ನು ನಿಗದಿಪಡಿಸಲಾಗಿದೆ (ಉಳಿದ ಬಡ್ಡಿಯನ್ನು ಸರ್ಕಾರವೇ ಭರಿಸುತ್ತದೆ). ಉದ್ಯಮದ ಸಂಪೂರ್ಣ ಮಾಲೀಕತ್ವವು ಎಸ್ಟಿ ಸಮುದಾಯದವರದ್ದೇ ಆಗಿರಬೇಕು ಎಂಬ ಷರತ್ತಿನೊಂದಿಗೆ, ಪಡೆದ ಸಾಲವನ್ನು 5 ವರ್ಷಗಳ ಅವಧಿಯಲ್ಲಿ ಮರುಪಾವತಿಸಲು ಅವಕಾಶವಿದ್ದು, ಇದು ಸಮುದಾಯದ ಯುವ ಉದ್ಯಮಿಗಳು ಕಡಿಮೆ ಬಂಡವಾಳ ವೆಚ್ಚದಲ್ಲಿ ಸ್ವಾವಲಂಬಿಗಳಾಗಲು ಅತ್ಯುತ್ತಮ ವೇದಿಕೆಯಾಗಿದೆ
ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಕೈಗೆಟುಕುವ ದರದಲ್ಲಿ ಬಂಡವಾಳ ಒದಗಿಸುವುದು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಉತ್ತೇಜಿಸುವುದು ಮತ್ತು ಸೇವಾ ವಲಯಗಳಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ
ಬಡ್ಡಿ ದರದ ರಿಯಾಯಿತಿ: ಈ ಯೋಜನೆಯಡಿ ಆಯ್ಕೆಯಾದ ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಕೇವಲ 4% ರಷ್ಟು ರಿಯಾಯಿತಿ ಬಡ್ಡಿ ದರದಲ್ಲಿ ಸಾಲದ ಸೌಲಭ್ಯ ದೊರೆಯುತ್ತದೆ. ಬ್ಯಾಂಕಿನ ಅಸಲಿ ಬಡ್ಡಿ ದರ ಮತ್ತು ಈ 4% ನಡುವಿನ ವ್ಯತ್ಯಾಸದ ಮೊತ್ತವನ್ನು ಸರ್ಕಾರವೇ ಬಡ್ಡಿ ಸಹಾಯಧನದ ರೂಪದಲ್ಲಿ ಭರಿಸುತ್ತದೆ.
ಗರಿಷ್ಠ ಸಾಲದ ಮಿತಿ: ಉದ್ಯಮಿಗಳು ತಮ್ಮ ಘಟಕಗಳ ಸ್ಥಾಪನೆ ಅಥವಾ ವಿಸ್ತರಣೆಗಾಗಿ ಈ ಯೋಜನೆಯ ಅಡಿಯಲ್ಲಿ ಗರಿಷ್ಠ 1.00 ಕೋಟಿ ರೂಪಾಯಿಗಳವರೆಗೆ ಸಾಲವನ್ನು ಪಡೆಯಲು ಅವಕಾಶವಿದೆ.
ಸಾಲ ಮರುಪಾವತಿಯ ಕಾಲಾವಕಾಶ: ಪಡೆದ ಸಾಲವನ್ನು ಮರುಪಾವತಿ ಮಾಡಲು ಉದ್ಯಮಿಗಳಿಗೆ 5 ವರ್ಷಗಳ ಕಾಲಾವಧಿಯನ್ನು ನಿಗದಿಪಡಿಸಲಾಗಿದೆ. ಈ ಅವಧಿಯಲ್ಲಿ ನಿಗದಿತ ಕಂತುಗಳ ಮೂಲಕ ಸಾಲ ತೀರಿಸಬಹುದಾಗಿದೆ.
ಸಾಲ ಒದಗಿಸುವ ಹಣಕಾಸು ಸಂಸ್ಥೆಗಳು: ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಉದ್ಯಮಿಗಳು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ , ಯಾವುದಾದರು ರಾಷ್ಟ್ರೀಕೃತ ಬ್ಯಾಂಕ್ಗಳು, ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ಗಳು ಅಥವಾ ಅಪೆಕ್ಸ್ ಸಹಕಾರಿ ಬ್ಯಾಂಕ್ಗಳಿಂದ ಸಾಲವನ್ನು ಪಡೆಯಬಹುದಾಗಿದೆ.
ಕೈಗಾರಿಕಾ ವಲಯ: ಆಹಾರ ಸಂಸ್ಕರಣಾ ಘಟಕಗಳು, ಜವಳಿ ಉದ್ಯಮ, ಸಿದ್ಧ ಉಡುಪುಗಳ ತಯಾರಿಕೆ, ಎಂಜಿನಿಯರಿಂಗ್ ವರ್ಕ್ಶಾಪ್ಗಳು ಮತ್ತು ಆಟೋಮೊಬೈಲ್ ಬಿಡಿಭಾಗಗಳ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಈ ಯೋಜನೆಯಡಿ ಸಾಲ ಪಡೆಯಬಹುದು.
ಮಾಹಿತಿ ತಂತ್ರಜ್ಞಾನ ಮತ್ತು ಸೇವಾ ವಲಯ: ಸಾಫ್ಟ್ವೇರ್ ಅಭಿವೃದ್ಧಿ ಕೇಂದ್ರಗಳು, ಐಟಿ ಆಧಾರಿತ ಸೇವೆಗಳು ಹಾಗೂ ಈವೆಂಟ್ ಮ್ಯಾನೇಜ್ಮೆಂಟ್ನಂತಹ ಸೇವಾ ಆಧಾರಿತ ಉದ್ಯಮಗಳಿಗೆ ಸರ್ಕಾರವು ಪ್ರೋತ್ಸಾಹ ನೀಡುತ್ತದೆ.
ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳು: 2021-22ನೇ ಸಾಲಿನಿಂದ ಈ ಯೋಜನೆಯನ್ನು ವಿಸ್ತರಿಸಲಾಗಿದ್ದು, ಇದರ ಅಡಿಯಲ್ಲಿ ಸ್ವಂತ ಮಳಿಗೆ, ಪ್ರಮುಖ ಕಂಪನಿಗಳ ಡೀಲರ್ಶಿಪ್, ಫ್ರಾಂಚೈಸಿಗಳು ಮತ್ತು ಹೋಟೆಲ್ ಉದ್ಯಮಗಳನ್ನು ಆರಂಭಿಸಲು ಅವಕಾಶ ಕಲ್ಪಿಸಲಾಗಿದೆ.
ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರ: ಸುಸಜ್ಜಿತ ಆಸ್ಪತ್ರೆಗಳು, ನರ್ಸಿಂಗ್ ಹೋಮ್ಗಳು, ಸ್ಕ್ಯಾನಿಂಗ್ ಅಥವಾ ಡಯಾಗ್ನೋಸ್ಟಿಕ್ ಸೆಂಟರ್ಗಳು, ದಂತ ಚಿಕಿತ್ಸಾಲಯ ಮತ್ತು ಕಣ್ಣಿನ ಆಸ್ಪತ್ರೆಗಳನ್ನು ತೆರೆಯಲು ಹಾಗೂ ಆಧುನಿಕ ವೈದ್ಯಕೀಯ ಉಪಕರಣಗಳ ಖರೀದಿಗೆ ಸಹಾಯಧನ ಲಭ್ಯವಿದೆ.
ಪ್ರವಾಸೋದ್ಯಮ ಮತ್ತು ಆತಿಥ್ಯ ವಲಯ: ಪ್ರವಾಸಿಗರನ್ನು ಸೆಳೆಯಲು ಹೋಟೆಲ್, ರೆಸಾರ್ಟ್, ಕ್ಯಾಟರಿಂಗ್ ಸೇವೆಗಳು, ಅಮ್ಯೂಸ್ಮೆಂಟ್ ಪಾರ್ಕ್ಗಳು ಮತ್ತು ಪ್ರವಾಸಿ ಏಜೆನ್ಸಿಗಳನ್ನು ನಡೆಸಲು ಆಸಕ್ತಿಯಿರುವ ಉದ್ಯಮಿಗಳು ಈ ಯೋಜನೆಯ ಲಾಭ ಪಡೆಯಬಹುದು.
ಉದ್ಯಮವು ಸಂಪೂರ್ಣವಾಗಿ ಪರಿಶಿಷ್ಟ ಪಂಗಡದ ವ್ಯಕ್ತಿಗಳ ಮಾಲೀಕತ್ವದಲ್ಲಿರಬೇಕು. ಪಾಲುದಾರಿಕೆ ಸಂಸ್ಥೆಯಾಗಿದ್ದರೆ, ಎಲ್ಲಾ ಪಾಲುದಾರರು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದವರಾಗಿರಬೇಕು.
ಅರ್ಜಿದಾರರು ಈ ಹಿಂದೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಥವಾ ಯಾವುದೇ ಬ್ಯಾಂಕ್ಗಳಲ್ಲಿ ಸಾಲ ಪಡೆದು ಮರುಪಾವತಿ ಮಾಡದೆ ಸುಸ್ತಿದಾರರಾಗಿರಬಾರದು.
ಈ ಹಿಂದೆ ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಬಡ್ಡಿ ಸಹಾಯಧನ ಯೋಜನೆಯಡಿ ಪ್ರಯೋಜನ ಪಡೆದಿದ್ದರೆ ಈ ಯೋಜನೆಗೆ ಅರ್ಹರಲ್ಲ.
ಹಂತ 1: ನಿಮ್ಮ ಜಿಲ್ಲೆಯ ಹತ್ತಿರದ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಶಾಖಾ ಕಚೇರಿ ಅಥವಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡಿ.
ಹಂತ 2: ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಎಲ್ಲಾ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ.
ಹಂತ 3: ಅಗತ್ಯವಿರುವ ದಾಖಲೆಗಳ ಸ್ವಯಂ ದೃಢೀಕರಿಸಿದ ಪ್ರತಿಗಳನ್ನು ಲಗತ್ತಿಸಿ.
ಹಂತ 4: ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ಕಚೇರಿಯಲ್ಲಿ ಸಲ್ಲಿಸಿ ಮತ್ತು ಸ್ವೀಕೃತಿ ಪತ್ರ ಪಡೆಯಿರಿ.
ದಾಖಲೆಗಳು
ಅರ್ಜಿದಾರರ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಫೋಟೋ.
ಜಾತಿ ಪ್ರಮಾಣಪತ್ರ (SC/ST ಧೃಢೀಕರಣ).
ಬಯೋ-ಡೇಟಾ ಮತ್ತು ನಿವ್ವಳ ಮೌಲ್ಯದ ಹೇಳಿಕೆ.
ನಿಗದಿತ ನಮೂನೆಯಲ್ಲಿ ಪ್ರಮಾಣಪತ್ರ.
ಬ್ಯಾಂಕ್ ಖಾತೆಯ ವಿವರಗಳು.
ಹೆಚ್ಚಿನ ಮಾಹಿತಿಗಾಗಿ ಅಥವಾ ಯಾವುದೇ ಸಂದೇಹಗಳಿದ್ದಲ್ಲಿ ನಿಮ್ಮ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಸಹಾಯವಾಣಿ ಸಂಖ್ಯೆ: 080-22261703 ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದು.
]]>ರಾಜ್ಯ ಸರಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆಯಡಿ ಸಣ್ಣ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಉದ್ದಿಮೆಯನ್ನು ಆರಂಭಿಸಲು ನೆರವು ನೀಡಲಾಗುತ್ತಿದೆ. ಈ ಯೋಜನೆಯಡಿ ಮೊಬೈಲ್ ಕ್ಯಾಂಟೀನ್ ಆರಂಭಿಸಲು ಆಹಾರ ಟ್ರಕ್ಗಳ ಖರೀದಿಗೆ ಸಹಾಯಧನಕ್ಕಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ಮೊಬೈಲ್ ಕ್ಯಾಂಟೀನ್ ಸಹಾಯಧನ ಯೋಜನೆ? ಯಾರಿಗೆ ಈ ಯೋಜನೆ ಅನ್ವಯಿಸಲಿದೆ? ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ತಿಳಿಯೋಣ.
ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಅಂದರೆ ಉದ್ಯಮಗಳನ್ನು ಪ್ರಾರಂಭಿಸಲು ಮತ್ತು ಅಭಿವೃದ್ಧಿಪಡಿಸಲು ಸಹಾಯ ಮಾಡುವ ಒಂದು ಯೋಜನೆಯಾಗಿದೆ. ಈ ಯೋಜನೆಯು ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ವ್ಯಕ್ತಿಗಳಿಗೆ ಆರ್ಥಿಕ ನೆರವು, ತರಬೇತಿ ಮತ್ತು ಮಾರ್ಗದರ್ಶನ ನೀಡುತ್ತದೆ. ಈ ಯೋಜನೆಯಡಿ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳು ಮತ್ತು ಸ್ವಯಂ ಉದ್ಯೋಗ ಘಟಕಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸಲಾಗುತ್ತದೆ.
ರಾಜ್ಯ ಸರಕಾರದಿಂದ ಸಮಾಜ ಕಲ್ಯಾಣ ಇಲಾಖೆಯು ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ ಯೋಜನೆಯ ಅಡಿಯಲ್ಲಿ ಮೊಬೈಲ್ ಕ್ಯಂಟೀನ್ ವ್ಯವಹಾರಗಳನ್ನು ಆರಂಭಿಸಲು ಧನ ಸಹಾಯ ನೀಡುತ್ತಿದೆ. ಈ ಯೋಜನೆಯಡಿ ನೀವು ಮೊಬೈಲ್ ಕ್ಯಾಂಟೀನ್ಗಳನ್ನು ಆರಂಭಿಸಲು ಸರ್ಕಾರದಿಂದ 4 ಲಕ್ಷ ರೂ.ವರೆಗಿನ ಸಹಾಯಧನ ಪಡೆಯಬಹುದಾಗಿದೆ.
ಪರಿಶಿಷ್ಟ ಜಾತಿಗೆ ಸೇರಿದ ನಿರುದ್ಯೋಗಿ ಯುವಕರಿಗೆ ಇಲಾಖೆಯ ಆಯಾ ನಿಗಮಗಳ ಅಡಿಯಲ್ಲಿ ಘಟಕ ವೆಚ್ಚದ 75% ಅಥವಾ ಗರಿಷ್ಠ 4.00 ಲಕ್ಷ ರೂ.ಗಳವರೆಗೆ ಸಹಾಯಧನ ನೀಡಲಾಗುವುದು.
ಷರತ್ತುಗಳು:-
ಅರ್ಹ ಅಭ್ಯರ್ಥಿಗಳು ನೇರವಾಗಿ ತಮ್ಮ ಮೊಬೈಲ್ ಮೂಲಕ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಿ ಕೆಳಗಿನ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕವೂ ಅರ್ಜಿಯನ್ನು ಸಲ್ಲಿಸಬಹುದು.
ಸಹಾಯಾಣಿ: ಯೋಜನೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ದಿನದ ಯಾವುದೇ ಸಮಯದಲ್ಲಿ ಸಹಾಯವಾಣಿ ಸಂಖ್ಯೆ
]]>
ಭಾರತದಲ್ಲಿ ಗೋವುಗಳನ್ನು ಪೂಜನೀಯ ದೃಷ್ಟಿಯಲ್ಲಿ ನೋಡಲಾಗುತ್ತದೆ. ಗೋವುಗಳು ರೈತರ ಜೀವನಾಡಿಯಾಗಿದೆ. ಹೀಗಾಗಿ ಗೋ ತಳಿಗಳ ಅಭಿವೃದ್ಧಿ ಹಾಗೂ ರೈತರಿಗೆ ಅನುಕೂಲಕ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ಗೋಕುಲ ಮಿಷನ್ ಎಂಬ ಮಹತ್ವಕಾಂಕ್ಷಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಇದು ಸ್ಥಳೀಯ ಹಸು ಮತ್ತು ಎಮ್ಮೆ ತಳಿಗಳ ಅಭಿವೃದ್ಧಿ, ಸಂರಕ್ಷಣೆ ಮತ್ತು ಹೈನುಗಾರಿಕೆಯನ್ನು ಲಾಭದಾಯಕವಾಗಿಸುವ ಗುರಿಯನ್ನು ಹೊಂದಿದೆ. ಪ್ರಸ್ತುತ ಈ ಯೋಜನೆಯು 2021-2026ರ ಅವಧಿಗೆ 'ರಾಷ್ಟ್ರೀಯ ಪಶುಧನ ವಿಕಾಸ ಯೋಜನೆ'ಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಏನಿದು ರಾಷ್ಟ್ರೀಯ ಗೋಕುಲ ಮಿಷನ್? ಇದರಿಂದ ರೈತರಿಗೆ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿಯೋಣ.
ಏನಿದು ರಾಷ್ಟ್ರೀಯ ಗೋಕುಲ ಮಿಷನ್?ರಾಷ್ಟ್ರೀಯ ಗೋಕುಲ ಮಿಷನ್ ಭಾರತ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಇದು 2014 ರಿಂದ 2026ರ ಅವಧಿಯವರೆಗೆ ಸ್ಥಳೀಯ ಗೋತಳಿಗಳ ಸಂರಕ್ಷಣೆ ಮತ್ತು ತಳಿ ಅಭಿವೃದ್ಧಿಗ ಒತ್ತು ನೀಡುತ್ತಿದೆ. ದೇಶೀಯ ಹಸು ಮತ್ತು ಎಮ್ಮೆಗಳ ತಳೀಯ ಸುಧಾರಣೆ ಮಾಡುವುದು, ಹಾಲಿನ ಉತ್ಪಾದಕತೆಯನ್ನು ಹೆಚ್ಚಿಸುವುದು ಮತ್ತು ಗ್ರಾಮೀಣ ರೈತರ, ವಿಶೇಷವಾಗಿ ಮಹಿಳಾ ಪಶುಪಾಲಕರ ಜೀವನೋಪಾಯವನ್ನು ಸುಧಾರಿಸುವುದು ಈ ಯೋಜನೆಯ ಪ್ರಮುಖ ಗುರಿಯಾಗಿದೆ. ಇದಕ್ಕಾಗಿ ಐವಿಎಫ್, ಲಿಂಗ-ವಿಂಗಡಿತ ವೀರ್ಯ ಮತ್ತು ರಾಷ್ಟ್ರವ್ಯಾಪಿ ಕೃತಕ ಗರ್ಭಧಾರಣೆ ಕಾರ್ಯಕ್ರಮಗಳಂತಹ ಸುಧಾರಿತ ವೈಜ್ಞಾನಿಕ ತಂತ್ರಜ್ಞಾನಗಳನ್ನು ಬಳಸಲಾಗುತ್ತಿದೆ. ಸುಸ್ಥಿರ ಹೈನುಗಾರಿಕೆಯನ್ನು ಉತ್ತೇಜಿಸುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಹಾಲಿನ ಲಭ್ಯತೆಯನ್ನು ಹೆಚ್ಚಿಸಲು ತ್ತು ಹೈನುಗಾರಿಕೆಯನ್ನು ಲಾಭದಾಯಕ ಉದ್ಯಮವನ್ನಾಗಿ ಮಾಡಲು ಈ ಮಿಷನ್ ಶ್ರಮಿಸುತ್ತಿದೆ.
ಯೋಜನೆಯ ಪ್ರಮುಖ ಉದ್ದೇಶಗಳು
ರಾಷ್ಟ್ರೀಯ ಗೋಕುಲ ಮಿಷನ್ನ ಚಟುವಟಿಕೆಗಳು
ಫಲಾನುಭವಿಗಳು ಮತ್ತು ಪ್ರಯೋಜನಗಳು
ರಾಷ್ಟ್ರೀಯ ಗೋಕುಲ ಮಿಷನ್ ಸಹಾಯಧನ ವಿವರ
| ಯೋಜನೆ / ಘಟಕ | ಸಬ್ಸಿಡಿ ಅಥವಾ ಆರ್ಥಿಕ ನೆರವು |
| ಸಾಮಾನ್ಯ ಘಟಕಗಳು | ಭಾರತ ಸರ್ಕಾರದಿಂದ 100% ಅನುದಾನ (ಕೆಲವು ವೈಯಕ್ತಿಕ ಘಟಕಗಳನ್ನು ಹೊರತುಪಡಿಸಿ). |
| ತ್ವರಿತ ತಳಿ ಸುಧಾರಣೆ | ಪ್ರತಿ ಖಚಿತ IVF ಗರ್ಭಧಾರಣೆಗೆ 5,000 ರೂ. ಪ್ರೋತ್ಸಾಹಧನ. |
| ಲಿಂಗ-ವಿಂಗಡಿತ ವೀರ್ಯ | ವೀರ್ಯದ ವೆಚ್ಚದ ಮೇಲೆ 50% ವರೆಗೆ ಸಬ್ಸಿಡಿ (ಹೆಣ್ಣು ಕರುಗಳ ಜನನ ಖಚಿತಪಡಿಸಲು). |
| ತಳಿ ವರ್ಧನಾ ಫಾರ್ಮ್ಗಳು | ಉದ್ಯಮಿಗಳು, SHG, FPO ಗಳಿಗೆ 50% ಬಂಡವಾಳ ಸಬ್ಸಿಡಿ (ಗರಿಷ್ಠ 2 ಕೋಟಿ ರೂ.ವರೆಗೆ). |
| ಹೆಫರ್ (ಹೆಣ್ಣು ಕರು) ಸಾಕಾಣಿಕೆ ಕೇಂದ್ರಗಳು | 15,000 ಕರುಗಳ ಸಾಮರ್ಥ್ಯದ ಕೇಂದ್ರ ಸ್ಥಾಪನೆಗೆ 35% ಸಹಾಯಧನ. |
| ಹೆಚ್ಚಿನ ಇಳುವರಿಯ IVF ಹೆಣ್ಣು ಕರುಗಳು |
ಇವುಗಳ ಖರೀದಿಗೆ ಪಡೆದ ಬ್ಯಾಂಕ್ ಸಾಲದ ಮೇಲೆ 3% ಬಡ್ಡಿ ರಿಯಾಯಿತಿ. |
ಅರ್ಜಿ ಸಲ್ಲಿಸುವುದು ಹೇಗೆ?
ಅಗತ್ಯವಿರುವ ದಾಖಲೆಗಳು
ಪ್ರಶ್ನೋತ್ತರಗಳು
ಭಾರತದಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡಲು ಜನರನ್ನು ಪ್ರೋತ್ಸಾಹಿಸಲು 'ರಾಹ್-ವೀರ್' ಅಥವಾ ರಸ್ತೆಯ ವೀರ ಯೋಜನೆ ಜಾರಿಯಾಗಿದೆ. ಅಪಘಾತವಾದ ಒಂದು ಗಂಟೆಯೊಳಗೆ ಸಂತ್ರಸ್ತರನ್ನು ಆಸ್ಪತ್ರೆಗೆ ಸೇರಿಸುವವರಿಗೆ 25,000 ರೂ. ಬಹುಮಾನ ಮತ್ತು ಕಾನೂನು ರಕ್ಷಣೆ ನೀಡಲಾಗುತ್ತದೆ. ಇದು ಅಮೂಲ್ಯ ಜೀವಗಳನ್ನು ಉಳಿಸಲು ಮತ್ತು 'ಉತ್ತಮ ಸಮರಿಟನ್' ಗಳನ್ನು ಗೌರವಿಸಲು ಉದ್ದೇಶಿಸಿದೆ. ಈ ಕುರಿತ ವಿವರಗಳು ಇಲ್ಲಿವೆ.
ಭಾರತದಲ್ಲಿ ರಸ್ತೆ ಅಪಘಾತದಿಂದಾಗಿ ಲಕ್ಷಾಂತರ ಮಂದಿ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಂಕಿಅಂಶಗಳ ಪ್ರಕಾರ, ಪ್ರತಿ ವರ್ಷ ಅಂದಾಜು 45 ಲಕ್ಷ ಅಪಘಾತಗಳು ನಡೆಯುತ್ತಿದ್ದು, ಪ್ರತಿ ಕೆಲವು ನಿಮಿಷಕ್ಕೆ ಒಬ್ಬರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅದರೆ, ಸರಿಯಾದ ಕ್ಷಣದಲ್ಲಿ ಚಿಕಿತ್ಸೆ ನೀಡಿದರೆ, ಅಮೂಲ್ಯ ಜೀವವನ್ನು ಉಳಿಸಬಹುದು. ಅಪಘಾತ ನಡೆದ ನಂತರದ ಮೊದಲ 60 ನಿಮಿಷಗಳನ್ನು 'ಗೋಲ್ಡನ್ ಅವರ್' ಎನ್ನಲಾಗುತ್ತದೆ. ಈ ಸಮಯದಲ್ಲಿ ಸಿಗುವ ತುರ್ತು ಚಿಕಿತ್ಸೆ ಸಾವು ಮತ್ತು ಶಾಶ್ವತ ಅಂಗವೈಕಲ್ಯವನ್ನು ತಡೆಯಬಲ್ಲದು. ಆದರೆ, ಪೊಲೀಸರ ವಿಚಾರಣೆ ಅಥವಾ ಕಾನೂನು ಸಂಕಷ್ಟಗಳಿಗೆ ಹೆದರಿ ಅನೇಕರು ಸಹಾಯ ಮಾಡಲು ಮುಂದೆ ಬರುತ್ತಿರಲಿಲ್ಲ. ಈ ಭಯವನ್ನು ಹೋಗಲಾಡಿಸಲು ಭಾರತ ಸರ್ಕಾರವು 'ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ 2019' ರ ಸೆಕ್ಷನ್ 134A ಅಡಿಯಲ್ಲಿ 'ರಸ್ತೆಯ ವೀರ' ಯೋಜನೆಯನ್ನು ಜಾರಿಗೆ ತಂದಿದೆ.
ಏನಿದು 'ರಸ್ತೆಯ ವೀರ' ಯೋಜನೆ?
61
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಮಹತ್ವಾಕಾಂಕ್ಷೆಯ ಯೋಜನೆಯಾದ 'ರಾಹ್-ವೀರ್' ಅಥವಾ “ರಸ್ತೆಯ ವೀರ' ಯೋಜನೆಯು ರಸ್ತೆ ಅಪಘಾತದ ಸಂತ್ರಸ್ತರಿಗೆ ತುರ್ತು ಸಂದರ್ಭದಲ್ಲಿ ನೆರವಾಗುವ ಸಾರ್ವಜನಿಕರನ್ನು ಉತ್ತೇಜಿಸುವ ಮತ್ತು ರಕ್ಷಿಸುವ ಉದ್ದೇಶವನ್ನು ಹೊಂದಿದೆ. ಈ ಯೋಜನೆಯಡಿ ಅಪಘಾತಕ್ಕೀಡಾದವರನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಸೇರಿಸುವ ವ್ಯಕ್ತಿಗಳಿಗೆ ಕಾನೂನು ಕಿರುಕುಳದಿಂದ ಸಂಪೂರ್ಣ ರಕ್ಷಣೆ ನೀಡಲಾಗುವುದು ಮಾತ್ರವಲ್ಲದೆ, ಅವರ ವೈಯಕ್ತಿಕ ವಿವರಗಳನ್ನು ನೀಡುವಂತೆ ಅಥವಾ ವಿಚಾರಣೆಗಾಗಿ ಅನಗತ್ಯವಾಗಿ ಕಾಯುವಂತೆ ಒತ್ತಾಯಿಸುವಂತಿಲ್ಲ. ಸಂತ್ರಸ್ತರ ಪ್ರಾಣ ಉಳಿಸಲು ಧೈರ್ಯದಿಂದ ಮುಂದೆ ಬರುವ ಇಂತಹ 'ಉತ್ತಮ ಸಮರಿಟನ್'ಗಳ ಘನತೆ ಮತ್ತು ಗೌಪ್ಯತೆಯನ್ನು ಕಾಪಾಡುವುದರ ಜೊತೆಗೆ, ಅವರಿಗೆ ಆರ್ಥಿಕ ಬಹುಮಾನ ಮತ್ತು ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ.
ಸಮರಿಟನ್ಗಳಿಗೆ ಬಹುಮಾನದ ಮೊತ್ತ ಎಷ್ಟು?
ಅಪಘಾತಕ್ಕೀಡಾದ ಸಂತ್ರಸ್ತನನ್ನು 'ಗೋಲ್ಡನ್ ಅವರ್' (ಅಪಘಾತವಾದ ಒಂದು ಗಂಟೆಯೊಳಗೆ) ಆಸ್ಪತ್ರೆಗೆ ಸೇರಿಸುವ ವ್ಯಕ್ತಿಗೆ ಪ್ರತಿ ಘಟನೆಗೆ 25,000 ರೂ. ನಗದು ಬಹುಮಾನ ನೀಡಲಾಗುತ್ತದೆ.
ಈ ನಗದು ಬಹುಮಾನದ ಜೊತೆಗೆ ವ್ಯಕ್ತಿಯ ಸೇವೆಗಾಗಿ ಗೌರವಾನ್ವಿತ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ.
ಒಬ್ಬ ವ್ಯಕ್ತಿಯು ಒಂದು ವರ್ಷದಲ್ಲಿ ಗರಿಷ್ಠ 5 ಬಾರಿ ಈ ಆರ್ಥಿಕ ಬಹುಮಾನ ಮತ್ತು ಪ್ರಶಂಸನಾ ಪತ್ರವನ್ನು ಪಡೆಯಲು ಅವಕಾಶವಿದೆ.
ದೇಶಾದ್ಯಂತ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಮೊದಲ 10 'ರಾಹ್-ವೀರ್'ಗಳನ್ನು ರಾಷ್ಟ್ರ ಮಟ್ಟದಲ್ಲಿ ಆಯ್ಕೆ ಮಾಡಿ, ಅವರಿಗೆ ತಲಾ 1,00,000 ರೂ. ಹೆಚ್ಚುವರಿ ಬಹುಮಾನ ನೀಡಲಾಗುತ್ತದೆ.
ಕರ್ನಾಟಕ ಸರ್ಕಾರವು ರೈತರಿಗೆ ಉಚಿತವಾಗಿ ಸುಧಾರಿತ ಮೇವಿನ ಬೀಜಗಳನ್ನು ನೀಡುತ್ತಿದೆ. ಇದರಿಂದ ಜಾನುವಾರುಗಳ ಆರೋಗ್ಯ ಸುಧಾರಿಸಿ ಹಾಲಿನ ಇಳುವರಿ ಹೆಚ್ಚುತ್ತದೆ. ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಆದ್ಯತೆ ನೀಡಲಾಗಿದೆ. ಅರ್ಹ ರೈತರು ತಮ್ಮ ಹತ್ತಿರದ ಪಶು ಆಸ್ಪತ್ರೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಇದು ರೈತರ ವೆಚ್ಚ ಕಡಿಮೆ ಮಾಡಿ ಸ್ವಾವಲಂಬನೆಗೆ ನೆರವಾಗುತ್ತದೆ. ಈ ಕುರಿತ ಮಾಹಿತಿಗಳು ಇಲ್ಲಿವೆ.
ಜಾನುವಾರುಗಳ ಆರೋಗ್ಯ ಮತ್ತು ಹೈನುಗಾರಿಕೆಯ ಲಾಭವು ಅವುಗಳಿಗೆ ನೀಡುವ ಆಹಾರದ ಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ. ಆದರೆ, ಜಾನುವಾರುಗಳಿಗೆ ಹಣಕೊಟ್ಟು ಮೇವು ತರುವುದು ರೈತರಿಗೆ ಕಷ್ಟಕರ. ಇದನ್ನು ಮನಗಂಡ ಕರ್ನಾಟಕ ಸರ್ಕಾರವು ರೈತರಿಗೆ ಉಚಿತವಾಗಿ ಸುಧಾರಿತ ತಳಿಗಳ ಮೇವಿನ ಬೀಜಗಳನ್ನು ವಿತರಿಸುವ ಯೋಜನೆಯನ್ನು ಜಾರಿಗೆ ತಂದಿದೆ. ಸರ್ಕಾರದಿಂದ ಜಾನುವಾರುಗಳಿಗೆ ಉಚಿತವಾಗಿ ಮೇವಿನ ಕಿರು ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ.
ಕರ್ನಾಟಕ ಸರ್ಕಾರದ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಜಾರಿಗೆ ತಂದಿರುವ 'ಮೇವಿನ ಕಿರು ಪೊಟ್ಟಣಗಳ ವಿತರಣೆ' ಯೋಜನೆಯು ಹೈನುಗಾರಿಕೆ ಮಾಡುವ ರೈತರಿಗೆ ಉಚಿತವಾಗಿ ಸುಧಾರಿತ ತಳಿಗಳ ಮೇವಿನ ಬೀಜಗಳನ್ನು ಒದಗಿಸುವ ಮಹತ್ವದ ಯೋಜನೆಯಾಗಿದ್ದು, ಇದು ಜಾನುವಾರುಗಳ ಪೌಷ್ಟಿಕಾಂಶವನ್ನು ಹೆಚ್ಚಿಸಿ ಹಾಲಿನ ಇಳುವರಿಯನ್ನು ಸುಧಾರಿಸುವ ಉದ್ದೇಶ ಹೊಂದಿದೆ. ಈ ಯೋಜನೆಯಡಿ ಆಫ್ರಿಕನ್ ಟಾಲ್ ಮೆಕ್ಕೆಜೋಳ, ಲುಸರ್ನ್, ಬರಸೀಮ್, ಓಟ್ಸ್ ಮತ್ತು ವಿವಿಧ ಜೋಳದ ತಳಿಗಳ ಬೀಜಗಳನ್ನು ಖಾರಿಫ್ ಮತ್ತು ರಬಿ ಹಂಗಾಮುಗಳಲ್ಲಿ ರೈತರಿಗೆ ಉಚಿತವಾಗಿ ವಿತರಿಸಲಾಗುತ್ತದೆ. ಒಮ್ಮೆ ಸೌಲಭ್ಯ ಪಡೆದ ಫಲಾನುಭವಿಗಳು ಒಂದು ವರ್ಷದ ನಂತರ ಮತ್ತೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಕರ್ನಾಟಕ ಸರ್ಕಾರವು ಗ್ರಾಮ ಒನ್ ಕೇಂದ್ರಗಳ ಫ್ರಾಂಚೈಸಿಯನ್ನು ಆರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಇದರಿಂದ ಗ್ರಾಮೀಣ ಜನರಿಗೆ ಸರ್ಕಾರಿ ಮತ್ತು ಖಾಸಗಿ ಸೇವೆಗಳು ಒಂದೇ ಸೂರಿನಡಿ ದೊರೆಯಲಿವೆ. ಕಲಬುರಗಿ ಮತ್ತು ಮೈಸೂರು ವಿಭಾಗದ ಜಿಲ್ಲೆಗಳಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಬಹುದು. ಅರ್ಜಿ ಸಲ್ಲಿಸಲು ಜನವರಿ 15, 2026 ಕೊನೆಯ ದಿನಾಂಕವಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ.
ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳು ಹಾಗೂ ಸೇವೆಗಳನ್ನು ಜನರಿಗೆ ತಲುಪಿಸುವಲ್ಲಿ ಗ್ರಾಮ ಒನ್ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತಿವೆ. ನೀವು ಕೂಡ ಗ್ರಾಮ ಒನ್ ಫ್ರಾಂಚೈಸಿಯನ್ನು ಆರಂಭಿಸಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬಹುದು. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಇ-ಆಡಳಿತ ನಿರ್ದೇಶನಾಲಯವು ಗ್ರಾಮೀಣ ಭಾಗದ ಜನರಿಗೆ ಒಂದೇ ಸೂರಿನಡಿ ಸರ್ಕಾರಿ ಮತ್ತು ಖಾಸಗಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ 'ಗ್ರಾಮ ಒನ್' ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.
ಗ್ರಾಮ ಒನ್ ಎಂಬುದು ಗ್ರಾಮೀಣ ಮಟ್ಟದಲ್ಲಿ ನಾಗರಿಕರಿಗೆ ಒಂದೇ ಸೂರಿನಡಿ ವಿವಿಧ ಸರ್ಕಾರಿ ಮತ್ತು ಖಾಸಗಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು 2020-21ರ ಆಯವ್ಯಯದಲ್ಲಿ ಘೋಷಿಸಿದ ಒಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಇದು ಗ್ರಾಮ ಮಟ್ಟದಲ್ಲಿ ನಾಗರಿಕ ಕೇಂದ್ರಿತ ಚಟುವಟಿಕೆಗಳಿಗೆ ಏಕ ಸಹಾಯಕ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಸರ್ಕಾರದಿಂದ ನಾಗರಿಕರಿಗೆ ಸರ್ಕಾರಿ ಸೇವೆಗಳು, ಬ್ಯಾಂಕಿಂಗ್ ಸೇವೆಗಳು ಮತ್ತು ಆರ್ಟಿಐ ಅರ್ಜಿಗಳೂ ಸೇರಿದಂತೆ ಸುಮಾರು 800ಕ್ಕೂ ಹೆಚ್ಚು ಸೇವೆಗಳನ್ನು ಸುಲಭವಾಗಿ ಪಡೆಯಬಹುದಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಈ ಕೇಂದ್ರಗಳು ವಾರದ ಏಳು ದಿನಗಳೂ ಸಹ ಬೆಳಿಗ್ಗೆ 8:00 ಗಂಟೆಯಿಂದ ರಾತ್ರಿ 8:00 ಗಂಟೆಯವರೆಗೆ ಸತತವಾಗಿ ಕಾರ್ಯನಿರ್ವಹಿಸುತ್ತವೆ. ಇದರಿಂದ ಗ್ರಾಮೀಣ ಜನರು ಕಚೇರಿಗಳಿಗೆ ಅಲೆಯುವ ಸಮಯ ಮತ್ತು ಹಣ ಉಳಿತಾಯವಾಗುತ್ತದೆ.

ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆಸಕ್ತಿ ಇರುವ ಅಭ್ಯರ್ಥಿಗಳು 01 ಜನವರಿ 2026 ರಿಂದಲೇ ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಫ್ರಾಂಚೈಸಿ ಪಡೆಯಲು ಅರ್ಜಿ ಸಲ್ಲಿಸಲು 15 ಜನವರಿ 2026ರ ಸಂಜೆ 6:00 ಗಂಟೆಯವರೆಗೆ ಮಾತ್ರ ಕಾಲಾವಕಾಶವಿರುತ್ತದೆ. ಈ ಅರ್ಜಿಗಳನ್ನು ಕಡ್ಡಾಯವಾಗಿ ಆನ್ಲೈನ್ ಮೂಲಕವೇ ಸಲ್ಲಿಸಬೇಕಾಗಿದ್ದು, ಯಾವುದೇ ರೀತಿಯ ಭೌತಿಕ ಅಥವಾ ಆಫ್ಲೈನ್ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ದಿನಾಂಕ ಮತ್ತು ಸಮಯದ ನಂತರ ಬರುವ ಯಾವುದೇ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಸ್ತುತ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಕೇವಲ ಕಲಬುರಗಿ ಮತ್ತು ಮೈಸೂರು ವಿಭಾಗದ ಜಿಲ್ಲೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ ಮೈಸೂರು ವಿಭಾಗದ ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಹಾಗೂ ಕೊಡಗು ಜಿಲ್ಲೆಗಳು ಸೇರಿದ್ದರೆ, ಕಲಬುರಗಿ ವಿಭಾಗದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಆಸಕ್ತ ಅಭ್ಯರ್ಥಿಗಳು ಮಾತ್ರ ಈ ಹಂತದಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿದಾರರು ಕನಿಷ್ಠ ಪಿಯುಸಿ (PUC II), ಡಿಪ್ಲೊಮಾ, ಐಟಿಐ ಅಥವಾ ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಇದರೊಂದಿಗೆ ಕಂಪ್ಯೂಟರ್ ನಿರ್ವಹಣೆಯ ಬಗ್ಗೆ ಕಡ್ಡಾಯವಾಗಿ ಜ್ಞಾನ ಹೊಂದಿರಬೇಕಾದುದು ಅವಶ್ಯಕ
ಈ ಕೇಂದ್ರವನ್ನು ಆರಂಭಿಸಲು ಅಭ್ಯರ್ಥಿಯು ಸುಮಾರು 1 ರಿಂದ 2 ಲಕ್ಷ ರೂಪಾಯಿಗಳ ಬಂಡವಾಳ ಹೂಡಿಕೆ ಮಾಡುವ ಸಾಮರ್ಥ್ಯ ಹೊಂದಿರಬೇಕು. ಅಭ್ಯರ್ಥಿಯು ಕಡ್ಡಾಯವಾಗಿ ಪೊಲೀಸ್ ತಪಾಸಣಾ ಪ್ರಮಾಣ ಪತ್ರವನ್ನು ಒದಗಿಸಬೇಕು. ಅರ್ಜಿಯ ಜೊತೆಗೆ 100 ರೂಪಾಯಿಗಳ ಮರುಪಾವತಿಸಲಾಗದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಒಂದು ವೇಳೆ ನೀವು ಈ ಯೋಜನೆಗೆ ಆಯ್ಕೆಯಾದರೆ, 5000 ರೂಪಾಯಿಗಳ ಮರುಪಾವತಿಸಬಹುದಾದ ಭದ್ರತಾ ಠೇವಣಿಯನ್ನು ಪಾವತಿಸಬೇಕು.
ಗ್ರಾಮ ಒನ್_ ಕೇಂದ್ರಗಳ ಸೇವೆಗಳ ವಿವರ

]]>
ಕೃಷಿ ಇಲಾಖೆಯ ಯೋಜನೆಗಳು ರೈತರಿಗೆ ಕೃಷಿ ಯಂತ್ರೋಪಕರಣ, ಬೆಳೆ ವಿಮೆ, ನೀರಾವರಿ, ಮಣ್ಣು ಪರೀಕ್ಷೆ, ಆದಾಯ ಬೆಂಬಲ ಮತ್ತು ಮಾರುಕಟ್ಟೆ ಸಂಪರ್ಕದಂತಹ ವಿವಿಧ ಸೌಲಭ್ಯಗಳನ್ನು ನೀಡುತ್ತವೆ, ಕೃಷಿ ಇಲಾಖೆಯಿಂದ ಸಿಗುವ 21 ಯೋಜನೆಗಳ ಬಗ್ಗೆ ಇಲ್ಲಿದೆ ಮಾಹಿತಿ.
ಕೃಷಿ ಇಲಾಖೆ ವತಿಯಿಂದ ಕೈಗೊಳ್ಳುತ್ತಿರುವ ಫಲಾನುಭವಿ ಆಧಾರಿತ ಯೋಜನೆಗಳು, ಫಲಾನುಭವಿಗಳ ಆಯ್ಕೆಗೆ ಇರುವ ಮಾನದಂಡಗಳ ವಿವರ
1. ಬೀಜಗಳ ಪೂರೈಕೆ: ಕೃಷಿ ಇಲಾಖೆಯ ಬೀಜಗಳ ಪೂರೈಕೆ ಮತ್ತು ಇತರೆ ಹೂಡುವಳಿ
ಯೋಜನೆಯಡಿ ರಾಜ್ಯದ ಎಲ್ಲಾ ವರ್ಗದ ರೈತರಿಗೆ ವಿವಿಧ ಕೃಷಿ ಬೆಳೆಗಳ (ಭತ್ತ, ರಾಗಿ, ಜೋಳ, ಮುಸುಕಿನ ಜೋಳ, ಸಜ್ಜೆ, ತೊಗರಿ, ಕಡಲೆ, ಹೆಸರು, ಉದ್ದು, ಅಲಸಂದೆ, ನೆಲಗಡಲೆ, ಸೂರ್ಯಕಾಂತಿ, ಸೋಯಾ ಅವರೆ, ಹತ್ತಿ ಇತ್ಯಾದಿ) ಪ್ರಮಾಣಿತ/ ನಿಜ ಚೀಟಿ ಬಿತ್ತನೆ ಬೀಜಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ. 50 ಹಾಗೂ ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಶೇ.75 ರ ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ. ಒಟ್ಟಾರೆ ಗರಿಷ್ಟ 2.00 ಹೆಕ್ಟೇರ್ ಅಥವಾ ಅವರ ವಾಸ್ತವಿಕ ಹಿಡುವಳಿ (Actual holding) ಯಾವುದು ಕಡಿಮೆಯೋ ಆ ವಿಸ್ತೀರ್ಣಕ್ಕೆ ಮಾತ್ರ ರಿಯಾಯಿತಿಯಲ್ಲಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ಬಿತ್ತನೆ ಬೀಜ ವಿತರಣೆಯಲ್ಲಿ ರೈತರ ಪಹಣಿಯಲ್ಲಿನ ವಿವರಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಪರಿಶಿಷ್ಟ ವರ್ಗ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ರೈತರು ಜಾತಿ ಪ್ರಮಾಣ ಪತ್ರವನ್ನು ជជ໖. ผู้ส่ง Farmer Registration & Unified Beneficiary Information System - FRUITS , Farmers Identification number(FID) ಪಡೆದಿರಬೇಕು.
2. ಸಸ್ಯ ಸಂರಕ್ಷಣೆ: ಶೇ.50ರ ಸಹಾಯಧನದಡಿ ಪೀಡೆನಾಶಕ/ ಜೈವಿಕ ಪೀಡೆನಾಶಕ ಹಾಗೂ ಜೈವಿಕ ನಿಯಂತ್ರಣಕಾರಕಗಳ ವಿತರಣೆ, ಬೀಜೋಪಚಾರ ಆಂದೋಲನ ಹಾಗೂ ಸುರಕ್ಷಿತ ಕೀಟನಾಶಕಗಳ ಬಳಕೆ ಬಗ್ಗೆ ತರಬೇತಿಗಾಗಿ ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ. ರೈತರು Farmer Registration & Unified Beneficiary Information System FRUITS Fe ನಲ್ಲಿ ನೋಂದಣಿಯಾಗಿ Farmers Identification number(FID) ಪಡೆದಿರಬೇಕು.
3. ಕೃಷಿ ಯಾಂತ್ರೀಕರಣ & ಕೃಷಿ ಸಂಸ್ಕರಣೆ:
ಕೃಷಿ ಯಾಂತ್ರೀಕರಣ: ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದಕ್ಕೆ ಅನುವು ಮಾಡಿಕೊಡಲು ಹಾಗೂ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ಈ ಯೋಜನೆಯಡಿ ಕೃಷಿ ಯಂತ್ರೋಪಕರಣಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ.50 ಹಾಗೂ ಪ.ಜಾ./ಪ.ಪಂ. ರೈತರಿಗೆ ಶೇ.90 ರಂತೆ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.1.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತದೆ ಹಾಗೂ 45 ಪಿ.ಟಿ.ಒ ಹೆಚ್.ಪಿ ವರೆಗಿನ ಟ್ರಾಕ್ಟರ್ ಗಳಿಗೆ ಸಾಮಾನ್ಯ ವರ್ಗದ ರೈತರಿಗೆ ರೂ.0.75 ಲಕ್ಷ ಹಾಗೂ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ರೈತರಿಗೆ ಶೇ.90 ರ ಗರಿಷ್ಠ ರೂ.3.00 ಲಕ್ಷ ಸಹಾಯಧನ ನೀಡಲಾಗುತ್ತಿದೆ.
ಕೃಷಿ ಸಂಸ್ಕರಣೆ: ಈ ಯೋಜನೆಯಡಿ ಕೃಷಿ ಸಂಸ್ಕರಣಾ ಘಟಕಗಳು, ಟಾರ್ಪಾಲಿನ್ ಮತ್ತು ಸಣ್ಣ ಯಂತ್ರಚಾಲಿತ ಎಣ್ಣೆಗಾಣ ಘಟಕಗಳನ್ನು ಸಹಾಯಧನದಡಿ ರೈತರಿಗೆ ವಿತರಿಸಲಾಗುತ್ತಿದೆ. ಸದರಿ ಯೋಜನೆಯಡಿ ಕೃಷಿ ಸಂಸ್ಕರಣಾ ಘಟಕಗಳು ಮತ್ತು ಟಾರ್ಪಾಲಿನ್ ಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ.50ರಷ್ಟು ಮತ್ತು ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಶೇ.90ರಷ್ಟು ಸಹಾಯಧನದಡಿ ನೀಡಲಾಗುವುದು. ಸಣ್ಣ ಯಂತ್ರಚಾಲಿತ ಎಣ್ಣೆಗಾಣ ಘಟಕಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ.75 ಹಾಗೂ ಪ.ಜಾ./ಪ.ಪಂ., ರೈತರಿಗೆ ಶೇ.90 ರಂತೆ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.1.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತಿದೆ.
Farmer Registration and Unified Beneficiary Information System FRUITS F Farmers Identification number (FID) ಪಡೆಯಬೇಕು. ರೈತರು ನಿಗದಿತ ಅರ್ಜಿ ನಮೂನೆಯಲ್ಲಿ ಆರ್.ಟಿ.ಸಿ. ಯೊಂದಿಗೆ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬೇಕು ಹಾಗೂ ಕೆ-ಕಿಸಾನ್ ತಂತ್ರಾಂಶದಲ್ಲಿ ಅರ್ಜಿಯನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ರೈತರಿಗೆ ಜೇಷ್ಠತೆ ಹಾಗೂ ಅನುದಾನ ಲಭ್ಯತೆಯ ಆಧಾರದ ಮೇರೆಗೆ ಮಾರ್ಗಸೂಚಿ ಅನ್ವಯ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ಒದಗಿಸಲಾಗುತ್ತಿದೆ. ರಾಜ್ಯದ ಎಲ್ಲಾ ರೈತರಿಗೂ ಯಂತ್ರೋಪಕರಣ/ಕೃಷಿ ಸಂಸ್ಕರಣಾ ಘಟಕಗಳ ಯೋಜನೆಯ ಸೌಲಭ್ಯ ನೀಡುವ ದೃಷ್ಟಿಯಿಂದ, ಒಮ್ಮೆ ಕೃಷಿ ಯಂತ್ರೋಪಕರಣ/ಕೃಷಿ ಸಂಸ್ಕರಣಾ ಘಟಕಗಳ ಸೌಲಭ್ಯ ಪಡೆದ ರೈತರು 7 ವರ್ಷಗಳ ನಂತರ ಮತ್ತು ಕೃಷಿ ಸಂಸ್ಕರಣಾ ಕಾರ್ಯಕ್ರಮದಡಿ ಟಾರ್ಪಲಿನ್ ಸೌಲಭ್ಯ ಪಡೆದ ರೈತರು 3 ವರ್ಷಗಳ ನಂತರ ಮತ್ತೆ ಸದರಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
4. ರೈತ ಸಿರಿ & ಸಾವಯವ ಕೃಷಿ: ಸಾವಯವ ಕೃಷಿ ಅಳವಡಿಕೆ ಮತ್ತು ದೃಢೀಕರಣ
ಕಾರ್ಯಕ್ರಮದಡಿ ರಾಜ್ಯದ ಸಾವಯವ ಪ್ರಮಾಣೀಕೃತ ಪ್ರದೇಶವನ್ನು ವಿಸ್ತರಿಸುವ ನಿಟ್ಟಿನಲ್ಲಿ ಆಸಕ್ತ ಗುಂಪು ಮತ್ತು ವ್ಯಕ್ತಿಗತ ಪ್ರಸ್ತಾವನೆಗಳ ಪ್ರಮಾಣೀಕರಣಕ್ಕಾಗಿ ಅನುದಾನ ಬಳಕೆ ಮಾಡಲಾಗುತ್ತದೆ.
ರೈತ ಸಿರಿ ಕಾರ್ಯಕ್ರಮದಡಿ ಸಿರಿಧಾನ್ಯಗಳ ಉತ್ಪಾದನೆಯನ್ನು ಪ್ರೋತ್ಸಾಹಿಸಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ಸಿರಿಧಾನ್ಯಗಳಾದ ನವಣೆ, ಹಾರಕ, ಕೊರಲೆ, ಸಾಮೆ, ಊದಲು, ಬರಗು ಬೆಳೆಗಳನ್ನು ಬೆಳೆದ ಎಲ್ಲಾ ವರ್ಗದ ರೈತರಿಗೆ ಪ್ರತಿ ಹೆಕ್ಟೇರಿಗೆ ರೂ.10000/-ದಂತೆ ಗರಿಷ್ಠ ಎರಡು ಹಕ್ಕೇರುಗಳಿಗೆ ಬೆಳೆ ಸಮೀಕ್ಷೆ ಆಧಾರದಂತೆ ಪ್ರೋತ್ಸಾಹಧನವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುವುದು ಹಾಗೂ ಸಾವಯವ ಮತ್ತು ಸಿರಿಧಾನ್ಯಗಳ ಉತ್ತೇಜನ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.
5. ಸಾವಯವ ಇಂಗಾಲ ಅಭಿಯಾನ: ರಾಜ್ಯದ ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲದ
ಪ್ರಮಾಣವನ್ನು ಹೆಚ್ಚಿಸಲು, ದ್ವಿದಳಧಾನ್ಯಗಳ ವಿಸ್ತೀರ್ಣ ಮತ್ತು ಉತ್ಪಾದನೆ ಹೆಚ್ಚಿಸುವ ಸಲುವಾಗಿ ಶೇ. 75ರ ರಿಯಾಯಿತಿ ದರದಲ್ಲಿ ಹಸಿರೆಲೆ ಗೊಬ್ಬರ ಬಿತ್ತನೆ ಬೀಜಗಳ ವಿತರಣೆ ಮಾಡಲಾಗುವುದು ಹಾಗೂ ಹಸಿರೆಲೆ ಗೊಬ್ಬರ ಬೀಜ ಮತ್ತು ಸಾವಯವ ಗೊಬ್ಬರಗಳ ಬಳಕೆಯಿಂದ ಸಾವಯವ ಇಂಗಾಲ ಹೆಚ್ಚಿಸುವ ಕುರಿತು ಪ್ರಾತ್ಯಕ್ಷಿಕೆಗಳನ್ನು (ಪ್ರತಿ ಪ್ರಾತ್ಯಕ್ಷಿಕೆಗೆ ರೂ. 2500/-) ಆಯೋಜಿಸಲಾಗುತ್ತಿದೆ. ರೈತರು Farmer Registration & Unified Beneficiary Farmers Identification Information System - FRUITS number(FID) ಪಡೆದಿರಬೇಕು.
6. ಹೊಸ ಬೆಳೆ ವಿಮಾ ಯೋಜನೆ: ಈ ಯೋಜನೆಯಡಿ ಪ್ರಕೃತಿ ವಿಕೋಪಗಳು, ಕೀಟಗಳು ಮತ್ತು
ರೋಗಗಳಿಂದಾಗಿ ಯಾವುದೇ ಅಧಿಸೂಚಿತ ಬೆಳೆ ವಿಫಲವಾದ ಪಕ್ಷದಲ್ಲಿ ರೈತರಿಗೆ ವಿಮಾ ರಕ್ಷಣೆ ಮತ್ತು ಹಣಕಾಸು ಬೆಂಬಲ ನೀಡಲಾಗುವುದು. ರೈತರಿಗೆ ನೀಡುವ ವಿಮಾ ಕಂತಿನ ರಿಯಾಯಿತಿಯಲ್ಲಿ ರಾಜ್ಯ ಸರ್ಕಾರದ ಪಾಲನ್ನು ನೀಡಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಅನುವು ಮಾಡಲಾಗುತ್ತಿದೆ.
ಈ ಯೋಜನೆಯಡಿ ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಾಗೂ ಇತರೆ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಪ್ರಥಮವಾಗಿ ಅಧಿಸೂಚಿಸಲಾಗುತ್ತದೆ. ಅಂತಿಮ ದಿನಾಂಕದೊಳಗೆ ರೈತರಿಂದ ಪ್ರೀಮಿಯಂ ಪಡೆದು ಬ್ಯಾಂಕ್ / ಸಹಕಾರ ಸಂಸ್ಥೆ / ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಬೆಳೆ ವಿಮೆ ನೋಂದಣಿ ಕಾರ್ಯ ಕೈಗೊಳ್ಳಲಾಗುತ್ತದೆ ದಾಖಲೆಗಳನ್ನು ಪರಿಶೀಲಿಸಿ ಅರ್ಹ ರೈತರ ಪ್ರಸ್ತಾವನೆಗಳನ್ನು ಸಂಬಂಧಿಸಿದ ವಿಮಾ ಸಂಸ್ಥೆಗಳಿಗೆ ಅಂಗೀಕರಿಸಲು ರವಾನಿಸಲಾಗುತ್ತದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯು ಕ್ಷೇತ್ರಾಧಾರಿತ ಹಾಗೂ ಇಳುವರಿ ಆಧಾರಿತ ಯೋಜನೆಯಾಗಿದ್ದು, ಮಾರ್ಗಸೂಚಿಯನುಸಾರ ಹೋಬಳಿ / ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯವರು ನೀಡುವ ಬೆಳೆ ಕಟಾವು ಪ್ರಯೋಗಗಳಿಂದ ಬಂದಂತಹ ವಾಸ್ತವಿಕ ಇಳುವರಿ ಮಾಹಿತಿಯು ನಿಗದಿಪಡಿಸಲಾದ ಪ್ರಾರಂಭಿಕ ಇಳುವರಿಗಿಂತ ಕಡಿಮೆ ಇದ್ದರೆ, ಇಳುವರಿಯ ಕೊರತೆಗನುಗುಣವಾಗಿ ಹೋಬಳಿ/ ಗ್ರಾಮ ಪಂಚಾಯಿತಿಯಲ್ಲಿ ಬೆಳೆ ವಿಮೆ ಮಾಡಿಸಿದ ಎಲ್ಲಾ ರೈತರು ಬೆಳೆ ವಿಮಾ ನಷ್ಟ ಪರಿಹಾರ ಪಡೆಯಲು ಅರ್ಹರಾಗುತ್ತಾರೆ. ಅರ್ಹ ರೈತರಿಗೆ ವಿಮೆ ಪರಿಹಾರ ಮೊತ್ತವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವಿಮಾ ಸಂಸ್ಥೆಯವರು ವರ್ಗಾಯಿಸುತ್ತಾರೆ.
7. ಬೆಳೆ ಸಮೀಕ್ಷೆ: ಪೂರ್ವ ಮುಂಗಾರು, ಮುಂಗಾರು, ಹಿಂಗಾರು ಮತ್ತು ಬೇಸಿಗೆ
ಹಂಗಾಮುಗಳಲ್ಲಿ ಬೆಳೆ ಸಮೀಕ್ಷೆ ಕೈಗೊಂಡ ಖಾಸಗಿ ನಿವಾಸಿಗಳಿಗೆ ಕೇಂದ್ರೀಕೃತ DBT k2 ಮೂಲಕ ಆಧಾರ್ ಆಧಾರಿತ ನೇರ ಗೌರವಧನ ಪಾವತಿ, ಮಾಸ್ಟರ್ ತರಬೇತುದಾರರು ಹಾಗೂ ಜಿಲ್ಲಾ ತಾಂತ್ರಿಕ ಸಲಹೆಗಾರರ ಗೌರವಧನ, ಬೆಳೆ ಸಮೀಕ್ಷೆ ಕುರಿತು ತರಬೇತಿ, ಕಾರ್ಯಾಗಾರ ಆಯೋಜನೆ, ವಿವಿಧ ಮಾಧ್ಯಮಗಳ ಮೂಲಕ ಜಾಹೀರಾತು, ಮುದ್ರಣ, ಸಿ.ಡಿ. ದಾಖಲಾತಿ, ವಿದ್ಯುನ್ಮಾನ ಮತ್ತು ವಿವಿಧ ಮಾಧ್ಯಮಗಳ ಮುಖಾಂತರ ಪ್ರಚಾರಕ್ಕಾಗಿ ತಗಲುವ ವೆಚ್ಚ, ಹೆಲ್ಸ್ ಡೆಸ್ಕ್ ಸಿಬ್ಬಂದಿ ವೇತನ ಹಾಗೂ ತಂತ್ರಾಂಶ ನಿರ್ವಹಣೆ ವೆಚ್ಚ, ಶೇ. 1ರಷ್ಟು ದತ್ತಾಂಶದ ಪರಿಶೀಲನೆ ಕೈಗೊಳ್ಳುವ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ ಸಿಬ್ಬಂದಿಗಳಿಗೆ ಗೌರವಧನ, ಬೆಳೆ ಸಮೀಕ್ಷೆ ಕಾರ್ಯತಂಡ ನಿರ್ವಹಣೆ, ಇತರೆ ಕಛೇರಿ ಮತ್ತು ಆಡಳಿತಾತ್ಮಕ ವೆಚ್ಚಕ್ಕಾಗಿ ಉಪಯೋಗಿಸಲಾಗುತ್ತದೆ. ಪಹಣಿ ಹೊಂದಿರುವ ಎಲ್ಲಾ ಹಿಡುವಳಿದಾರರು ಅರ್ಹರಿರುತ್ತಾರೆ.
8. ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ: ಎಸ್.ಎಸ್.ಎಲ್.ಸಿ/ 10ನೇ ತರಗತಿಯನ್ನು
ಪೂರೈಸಿರುವ ಹಾಗೂ ರಾಜ್ಯದ ಯಾವುದೇ ಭಾಗದಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆ/ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಗಳವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ರೈತರ ಹಾಗೂ ಪ್ರೌಢಶಾಲಾ ಶಿಕ್ಷಣ ಪಡೆಯುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳಿಗೆ ಹಾಗೂ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ.
ಸದರಿ ಯೋಜನೆಯಡಿ:-
8, 9 ಮತ್ತು 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳು ಮತ್ತು ಎಸ್.ಎಸ್.ಎಲ್.ಸಿ /10ನೇ ತರಗತಿಯನ್ನು ಪೂರೈಸಿರುವ ಹಾಗೂ ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣಸಂಸ್ಥೆ/ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್-ಗಳವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ರೈತರ ಮಕ್ಕಳು ಈ ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುತ್ತಾರೆ.
ರೈತ ಕುಟುಂಬದ ಎಲ್ಲಾ ಮಕ್ಕಳು 'ಮುಖ್ಯಮಂತ್ರಿ ರೈತ ವಿದ್ಯಾನಿಧಿ' ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುತ್ತಾರೆ. ಸದರಿ ಉದ್ದೇಶಕ್ಕೆ ರೈತ ಎಂದರೆ ರಾಜ್ಯದ ಯಾವುದೇ ಭಾಗದಲ್ಲಿ ಉಳುಮೆ ಮಾಡುವಂತಹ/ ಕೃಷಿ ಮಾಡುವಂತಹ ಜಮೀನನ್ನು ತನ್ನ ಹೆಸರಿನಲ್ಲಿ ಹೊಂದಿರುವಂತಹ ವ್ಯಕ್ತಿ (ಕೃಷಿ ಇಲಾಖೆಯ FRUITS ತಂತ್ರಾಂಶದಲ್ಲಿ ಭೂಸಹಿತ FID ಸಂಖ್ಯೆ ಹೊಂದಿರಬೇಕು). ಕೃಷಿ ಕಾರ್ಮಿಕರು ಎಂದರೆ ಕೃಷಿ ಇಲಾಖೆಯ FRUITS ತಂತ್ರಾಂಶದಲ್ಲಿ ಭೂರಹಿತ FID ಸಂಖ್ಯೆ ಹೊಂದಿದ್ದು MGNREGA ಉದ್ಯೋಗ ಚೀಟಿ ಹೊಂದಿರಬೇಕು. ರೈತ ಕುಟುಂಬ ಎಂದರೆ ರಾಜ್ಯದ ಇ-ಆಡಳಿತ ಇಲಾಖೆಯು ನಿರ್ವಹಿಸುತ್ತಿರುವ "ಕುಟುಂಬ' ತಂತ್ರಂಶದ ದತ್ತಾಂಶದಲ್ಲಿ ದಾಖಲಾಗಿರುವ ಸದಸ್ಯರು.
ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಇತರೆ ಯಾವುದೇ ಇಲಾಖೆಯು ನೀಡುವ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು 'ಮುಖ್ಯಮಂತ್ರಿ ರೈತ ವಿದ್ಯಾನಿಧಿ' ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುವುದಿಲ್ಲ.
9. ಕೃಷಿ ಪ್ರಶಸ್ತಿ ಮತ್ತು ಕೃಷಿ ಪಂಡಿತ ಪ್ರಶಸ್ತಿ:
ಹಿಂದೆ ಕೃಷಿ ಪಂಡಿತ ಪ್ರಶಸ್ತಿ: ಕೃಷಿ ಕ್ಷೇತ್ರದಲ್ಲಿ ವಿನೂತನ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗಾಗಿ ಕೊಡುಗೆ ನೀಡುತ್ತಿರುವ ರೈತ ಮತ್ತು ರೈತ ಮಹಿಳೆಯರಿಗೆ ಕೃಷಿ ಪಂಡಿತ ಪ್ರಶಸ್ತಿ ನೀಡಲಾಗುತ್ತಿದೆ. ಪಂಡಿತ ಪ್ರಶಸ್ತಿ (ಪ್ರಥಮ/ದ್ವಿತೀಯ/ತೃತೀಯ/ಉದಯೋನ್ಮುಖ) ಪಡೆದವರು ಹೊರತುಪಡಿಸಿ ಉಳಿದೆಲ್ಲಾ ರೈತ ಮತ್ತು ರೈತ ಮಹಿಳೆಯರು ಕೃಷಿ ಪಂಡಿತ ಪ್ರಶಸ್ತಿಗೆ ಸ್ಪರ್ಧಿಸಬಹುದಾಗಿರುತ್ತದೆ. ಕೃಷಿ
ಕೃಷಿ ಪ್ರಶಸ್ತಿ : ಕೃಷಿ ಕ್ಷೇತ್ರದಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು ರೈತರಲ್ಲಿ ಆರೋಗ್ಯಕರ ಸ್ಪರ್ಧಾ ಮನೋಭಾವನೆಯನ್ನು ಉಂಟು ಮಾಡಿ ಅತಿ ಹೆಚ್ಚು ಇಳುವರಿ ಪಡೆಯುವ ರೈತ ಮತ್ತು ರೈತ ಮಹಿಳೆಯರಿಗೆ ಕೃಷಿ ಪ್ರಶಸಿಯನ್ನು ನೀಡಲಾಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಬೆಳೆ ಸ್ಪರ್ಧೆಯಡಿ ವಿಜೇತರಾದವರನ್ನು ಹೊರತುಪಡಿಸಿ ಉಳಿದೆಲ್ಲಾ ರೈತರು ಕೃಷಿ ಪ್ರಶಸ್ತಿಗೆ ಸ್ಪರ್ಧಿಸಬಹುದಾಗಿರುತ್ತದೆ.
10.ತರಬೇತಿ ಕಾರ್ಯಕ್ರಮಗಳು: ಈ ಯೋಜನೆಯಡಿ ಕೃಷಿ ವಿಸ್ತರಣಾ ಅಧಿಕಾರಿಗಳ ನಿರ್ವಹಣಾ
ಸಾಮರ್ಥ್ಯ ಮತ್ತು ರೈತರ/ ರೈತ ಮಹಿಳೆಯರ ವೃತ್ತಿ ಸಾಮರ್ಥ್ಯವನ್ನು ಹೆಚ್ಚಿಸಲು ಕೃಷಿ ತಾಂತ್ರಿಕತೆಗಳಿಗೆ ಸಂಬಂಧಿಸಿದಂತೆ ವಿಶೇಷ ತರಬೇತಿಗಳನ್ನು ಹಾಗೂ ಅಧ್ಯಯನ ಪ್ರವಾಸಗಳನ್ನು ಆಯೋಜಿಸಲಾಗುತ್ತದೆ.
11. ಕೃಷಿ ಭಾಗ್ಯ: ಮಳೆಯಾಶ್ರಿತ ಕೃಷಿ ನೀತಿ
ಒಣ ಹವಾಮಾನ ವಲಯಗಳ 24 ಬರ ಪೀಡಿತ ಜಿಲ್ಲೆಗಳಲ್ಲಿನ 106 ತಾಲ್ಲೂಕುಗಳಲ್ಲಿ ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನ ಮಾಡಲಾಗುವುದು. ರಾಜ್ಯದ ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವುದು, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ದತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸುವುದು ಮತ್ತು ಆದಾಯವನ್ನು ಹೆಚ್ಚಿಸುವುದು. ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ಕೆ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿರುತ್ತದೆ. ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ನೀರು ಸಂಗ್ರಹಣಾ ರಚನೆ (ಕೃಷಿ ಹೊಂಡ), ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (GI Wire Stone Fencing). ಹೊಂಡದಿಂದ ನೀರು ಎತ್ತಲು ಡೀಸೆಲ್/ಪೆಟ್ರೋಲ್/ಸೋಲಾರ್ ಪಂಪ್ ಸೆಟ್, ನೀರನ್ನು ಬೆಳೆಗೆ ಘಟಕಗಳನ್ನು ಒದಗಿಸಲು ಹಾಯಿಸಲು ಸೂಕ್ಷ್ಮ(ತುಂತುರು/ಹನಿ) ಯೋಜಿಸಲಾಗುತ್ತಿದೆ. ನೀರಾವರಿ
ಫಲಾನುಭವಿಯ ಆಯ್ಕೆ ಮಾನದಂಡಗಳು:
ಕ್ಷೇತ್ರ ಪರಿಶೀಲನೆಯಲ್ಲಿ ಅರ್ಹಗೊಂಡ ರಾಜ್ಯದ 5 ಕೃಷಿ ಹವಾಮಾನ ಒಣ ವಲಯದ (ಅಚ್ಚು ಕಟ್ಟು ಪ್ರದೇಶ ಹೊರತುಪಡಿಸಿ) ಎಲ್ಲಾ ಆಸಕ್ತ ರೈತರು ಯೋಜನೆಗೆ ಅರ್ಹರಾಗಿರುತ್ತಾರೆ.
ರೈತರ ಒಟ್ಟು ಸಾಗುವಳಿ ಕ್ಷೇತ್ರದ ಒಂದು ಸರ್ವೆ ನಂಬರ್ ನಲ್ಲಿ ಕನಿಷ್ಠ 1 ಎಕರೆ (single land parcel).
ಕೃಷಿ ಭಾಗ್ಯ ಯೋಜನೆಯ ಪೂರ್ಣ ಪ್ಯಾಕೇಜ್ನ ಘಟಕಗಳನ್ನು ಅನುಷ್ಠಾನಗೊಳಿಸಲು ಆಸಕ್ತಿಯಿರುವಂತಹ ರೈತರನ್ನು ಮಾತ್ರ ಆಯ್ಕೆ ಮಾಡಿ ಕ್ಷೇತ್ರ ಪರಿಶೀಲನ ಕೈಗೊಳ್ಳಲಾಗುವುದು.
ಹಿಂದಿನ ಸಾಲುಗಳಲ್ಲಿ ಕೃಷಿ ಭಾಗ್ಯ ಯೋಜನೆ ಅಥವ ಇನ್ಯಾವುದೇ ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಯಾಗಿರುವ ರೈತರು ಸದರಿ ಯೋಜನೆಗೆ ಅರ್ಹತೆ ಹೊಂದಿರುವುದಿಲ್ಲ
ಪರಿಶಿಷ್ಟ ಜಾತಿ/ಪ.ಪಂಗಡ ರೈತರು ಸರ್ಕಾರದ ನಿರ್ದಿಷ್ಟ ಅನುಪಾತದನ್ವಯ ಅರ್ಹರಾಗಿರುತ್ತಾರೆ.
]]>ಗ್ಯಾರಂಟಿ ಯೋಜನೆಗಳ ಆರ್ಥಿಕ ಕಡಿಮೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಿಗದಿತ ಮಾನದಂಡ ಉಲ್ಲಂಘಿಸಿ ಪಡೆದುಕೊಂಡಿದ್ದ ಸುಮಾರು 4.50 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿದೆ.
ರದ್ದುಗೊಂಡ ಕಾರ್ಡ್ ದಾರರು ಸಹಜವಾಗಿಯೇ ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳಿಂದ ಹೊರಗುಳಿಯಲಿದ್ದಾರೆ.
ಇದರಿಂದ ರಾಜ್ಯದ ಬೊಕ್ಕಸಕ್ಕೆ ಪ್ರತಿ ತಿಂಗಳು ಸುಮಾರು 110 ಕೋಟಿ ರೂಪಾಯಿಗೂ ಅಧಿಕ ಹಣ ಉಳಿತಾಯವಾಗುತ್ತದೆ.
ರಾಜ್ಯಾದ್ಯಂತ ಆಹಾರ ಇಲಾಖೆ 4.50 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿದೆ. ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿಯಿಂದ 14.50 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇವರು ಅಧಿಕ ಆದಾಯ ಹೊಂದಿದವರು ಮತ್ತು ಕುಟುಂಬ ಸದಸ್ಯರು ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ. ಹೀಗಾಗಿ ಈ ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆ ಪ್ರಯೋಜನ ನಿಂತಿದೆ. ಇದೊಂದೇ ಯೋಜನೆಯಿಂದ ತಿಂಗಳಿಗೆ ಸುಮಾರು 90 ಕೋಟಿ ಉಳಿತಾಯವಾಗುತ್ತದೆ. ಈ ಫಲಾನುಭವಿಗಳಿಗೆ ತಿಂಗಳಿಗೆ 72.50 ಲಕ್ಷ ಕ್ವಿಂಟಲ್ ಪಡಿತರ ವಿತರಿಸಲಾಗುತ್ತಿತ್ತು. ಇದಕ್ಕೆ ವೆಚ್ಚವಾಗುತ್ತಿದ್ದ ಅಂದಾಜು 22 ಕೋಟಿ ರೂಪಾಯಿ ಉಳಿತಾಯವಾಗಿದೆ.
7,76,206 ಬಿಪಿಎಲ್ ಕಾರ್ಡುಗಳನ್ನು ಶಂಕಾಸ್ಪದ ಪಟ್ಟಿಗೆ ಸೇರ್ಪಡೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇವು ಕೂಡ ರದ್ದಾಗುವ ಸಾಧ್ಯತೆ ಇದೆ.

ಅನರ್ಹ ಪಟ್ಚಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಈ ತಿಂಗಳಿನಿಂದ ಅನ್ನಭಾಗ್ಯ ಹಾಗೂ ಗೃಹಲಕ್ಷ್ನಿ ಹಣ ಸಿಗುವುದಿಲ್ಲ

ಕೃಷಿಯಂತೆ ಹೈನುಗಾರಿಕೆಯನ್ನು ನಂಬಿ ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸುತ್ತಿವೆ. ಹೈನುಗಾರಿಕೆ ಮೂಲಕ ಗ್ರಾಮೀಣ ಮಹಿಳೆಯರ ಸಾಮಾಜಿಕ, ಆರ್ಥಿಕ ಮಟ್ಟವನ್ನು ಸುಧಾರಿಸಲು ಕ್ಷೀರ ಸಂಜೀವಿನಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸೊಸೈಟಿ (KSRLPS) ಮತ್ತು ಕರ್ನಾಟಕ ಹಾಲು ಮಹಾಮಂಡಳಿ (KMF) ಜಂಟಿಯಾಗಿ "ಕ್ಷೀರ ಸಂಜೀವಿನಿ" ಯೋಜನೆಯನ್ನು ಪ್ರಾರಂಭಿಸಿವೆ. ಈ ಯೋಜನೆಯ ಮುಖ್ಯ ಉದ್ದೇಶವು ಗ್ರಾಮೀಣ ಪ್ರದೇಶದ ಬಡ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮತ್ತು ಹೈನುಗಾರಿಕೆಯನ್ನು ಅವರ ಜೀವನೋಪಾಯದ ಮೂಲವನ್ನಾಗಿ ಪ್ರೋತ್ಸಾಹಿಸುವುದು. ಈ ಹಿನ್ನೆಲೆಯಲ್ಲಿ ಏನಿದು ಕ್ಷೀರ ಸಂಜೀವಿನಿ ಯೋಜನೆ? ಇದರಿಂದ ರೈತರಿಗೆ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿಯೋಣ.
ಕ್ಷೀರ ಸಂಜೀವಿನಿ ಯೋಜನೆಯು ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ಹಾಲು ಒಕ್ಕೂಟದ ಯೋಜನೆಯಾಗಿದ್ದು, ಮಹಿಳಾ ಹೈನು ಸಹಕಾರಿ ಸಂಘಗಳನ್ನು ಉತ್ತೇಜಿಸುವ ಮೂಲಕ ಹಾಗೂ ಹೈನುಗಾರಿಕೆಯ ಮೂಲಕ ಬಡ ಗ್ರಾಮೀಣ ಮಹಿಳೆಯರ ಸಬಲೀಕರಣದ ಗುರಿಯನ್ನು ಹೊಂದಿದೆ. ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಮಿಷನ್ ಸಹಯೋಗದೊಂದಿಗೆ ಪ್ರಾರಂಭಿಸಲಾದ ಈ ಉಪಕ್ರಮವು ಹೈನುಗಾರಿಕೆಯಲ್ಲಿ ತೊಡಗಿರುವ ಮಹಿಳೆಯರಿಗೆ ತರಬೇತಿ, ಆರ್ಥಿಕ ಬೆಂಬಲ ಮತ್ತು ಸಂಪನ್ಮೂಲಗಳನ್ನು ಒದಗಿಸುತ್ತದೆ. ಈ ಮೂಲಕ ಅವರ ಆದಾಯ ಮತ್ತು ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಹೆಚ್ಚಿಸುತ್ತದೆ. ಮೊದಲ ಹಂತದ ಯೋಜನೆ 2014ರ ಏಪ್ರಿಲ್ನಲ್ಲಿ ಪ್ರಾರಂಭವಾಯಿತು. ಪ್ರಸ್ತುತ ಕ್ಷೀರ ಸಂಜೀವಿನಿ ಯೋಜನೆಯನ್ನು 3ನೇ ಹಂತದಲ್ಲಿ ಜಾರಿಗೊಳಿಸಲಾಗುತ್ತಿದೆ.
ಕ್ಷೀರ ಸಂಜೀವಿನಿ ಯೋಜನೆಯ ಪ್ರಮುಖ ಗುರಿ ಸಮಾಜದ ಹಿಂದುಳಿದ ವರ್ಗದ ಮಹಿಳೆಯರಿಗೆ, ಅಂದರೆ ಹಿಂದುಳಿದ ಜಾತಿಗಳು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿಗಳು/ಪರಿಶಿಷ್ಟ ಪಂಗಡಗಳು, ಬಿಪಿಎಲ್ ಕುಟುಂಬಗಳು ಮತ್ತು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಆದಾಯದ ಮೂಲವನ್ನು ಒದಗಿಸುವುದು. ಈ ಯೋಜನೆಯ ಮೂಲಕ ಸುಮಾರು 10,000 ಮಹಿಳೆಯರಿಗೆ ಸಹಾಯ ಮಾಡಲು ಉದ್ದೇಶಿಸಲಾಗಿದೆ. ಕ್ಷೀರ ಸಂಜೀವಿನಿ ಯೋಜನೆಯನ್ನು ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗಿದ್ದು, ಬೇಡಿಕೆಗೆ ತಕ್ಕಂತೆ ಯೋಜನೆಯ ಸೌಲಭ್ಯಗಳನ್ನು ವಿಸ್ತರಿಸಲಾಗುತ್ತಿದೆ.
ಈ ಯೋಜನೆಯನ್ನು ಒಟ್ಟು 250 ಮಹಿಳಾ ಡೈರಿ ಸಹಕಾರಿ ಸಂಘಗಳ ಮೂಲಕ ಜಾರಿಗೊಳಿಸಲಾಗುತ್ತದೆ. ಪ್ರತಿ ಸಂಘದಿಂದ 40 ಟಾರ್ಗೆಟ್ ಗುಂಪುಗಳ ಸದಸ್ಯರನ್ನು ಗುರುತಿಸಲಾಗುತ್ತದೆ. ಈ ಮೂಲಕ ಒಟ್ಟು 10,000 ಮಹಿಳೆಯರಿಗೆ (250 x 40 = 10,000) ನಿಶ್ಚಿತ ಜೀವನೋಪಾಯವನ್ನು ಒದಗಿಸುವ ಗುರಿ ಹೊಂದಿದೆ. ಈ ಯೋಜನೆಗೆ KSRLPS (ಸಂಜೀವಿನಿ) ಬಹುಪಾಲು ಹಣವನ್ನು ಒದಗಿಸಿದ್ದು, ಉಳಿದ ಮೊತ್ತವನ್ನು KMF ನೀಡಿದೆ.
ಯೋಜನೆಯ ಪ್ರಯೋಜನ ಪಡೆಯಲು ಬಯಸುವ ಮಹಿಳೆಯರು ಈ ಕೆಳಗಿನ ಮಾನದಂಡಗಳನ್ನು ಪೂರೈಸಬೇಕು:
ಕ್ಷೀರ ಸಂಜೀವಿನಿ ಯೋಜನೆಯು ವ್ಯಕ್ತಿಗಳಿಗೆ ನೇರ ಅರ್ಜಿ ಪ್ರಕ್ರಿಯೆಯನ್ನು ಹೊಂದಿಲ್ಲ. ಇದು ಹೈನುಗಾರಿಕೆಯ ಮೂಲಕ ಮಹಿಳೆಯರ ಸಬಲೀಕರಣದ ಗುರಿಯನ್ನು ಹೊಂದಿರುವ ಯೋಜನೆಯಾಗಿದೆ ಮತ್ತು ಮಹಿಳಾ ಹೈನು ಸಹಕಾರಿ ಸಂಘಗಳನ್ನು ಸ್ಥಾಪಿಸುವ ಮೂಲಕ ಇದರ ಪ್ರಯೋಜನಗಳನ್ನು ತಲುಪಿಸಲಾಗುತ್ತದೆ. ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಘ ಮತ್ತು ಕರ್ನಾಟಕ ಹಾಲು ಒಕ್ಕೂಟ ಅನುಷ್ಠಾನಗೊಳಿಸುವ ಸಂಸ್ಥೆಗಳಾಗಿವೆ.
]]>
ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ದಾಖಲಿಸಲು ಹಿಂಗಾರು ರೈತರ ಬೆಳೆ ಸಮೀಕ್ಷೆ 2025-26 ಎಂಬ ಹೆಸರಿನ ಮೊಬೈಲ್ ಅಪ್ಲಿಕೇಶನ್ನ್ನು ಗೂಗಲ್ ಪ್ಲೇ ಸ್ಟೋರ್ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.
ಜನೆವರಿ 15, 2026 ರೊಳಗಾಗಿ ಬೆಳೆ ವಿವರಗಳನ್ನು ಆಯಪ್ ಮೂಲಕ ಅಪಲೋಡ್ ಮಾಡಬೇಕು. ಮೊಬೈಲ್ ಆಯಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ. ಮತ್ತು ಖಾಸಗಿ ನಿವಾಸಿಗಳಿಂದ ಬೆಳೆ ಸಮೀಕ್ಷೆ ಕಾರ್ಯವು ಜನೆವರಿ 30, 2026 ರಂದು ಪೂರ್ಣಗೊಳ್ಳಲಿದ್ದು, ಒಂದು ವೇಳೆ ಖಾಸಗಿ ನಿವಾಸಿಗಳು ನಮೂದಿಸಿದ ಬೆಳೆಯು ತಪ್ಪಾಗಿದ್ದಲ್ಲಿ ರೈತರು ಫೆಬ್ರವರಿ 15, 2026 ರೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬೇಕು.
ಹೆಚ್ಚಿನ ತಾಂತ್ರಿಕ ಮಾಹಿತಿಗಾಗಿ ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ: 18004253553 ಗೆ ಕರೆಮಾಡಿ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ.ಬೆಳೆ ಸಮೀಕ್ಷೆ ಮಾಹಿತಿಯು ಕನಿಷ್ಠ ಬೆಂಬಲ ಯೋಜನೆಯಡಿ (ಎಮ್ಎಸ್ಪಿ) ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಬೆಳೆ ಹಾನಿ ಪರಿಹಾರ ವಿತರಿಸಲು, ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಮತ್ತು ಇತರ ಮಾನದಂಡಗಳಿಗೆ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ನಿಖರವಾಗಿ ತಾವೇ ಸಮೀಕ್ಷೆ ಮಾಡಲು ಕೃಷಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Bele samikshe status-ಬೆಳೆ ಸಮಿಕ್ಷೆ ಸರಿಯಾಗಿ ಆದ ಬೆಳೆಗಳಿಗೆ ಮಾತ್ರ ಬೆಳೆವಿಮೆ ಬೆಳೆಹಾನಿ ಹಣ,ನಿಮ್ಮ ಬೆಳೆ ಸಮಿಕ್ಷೆ ಸರಿಯಾಗಿ ಆಗಿದೆಯಾ ಚೆಕ್ ಮಾಡಿಕೊಳ್ಳಿ
ಬೆಳೆ ಸಮೀಕ್ಷೆ(Bele samikshe) ಮೂಲಕ ಸಂಗ್ರಹಿಸಲಾದ ಬೆಳೆ
ಮಾಹಿತಿ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ ದರ್ಶಕ ಮೊಬೈಲ್ ಆ್ಯಪ್(Bele darshaka App)ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ(Crop survey portal) ಮೂಲಕ ಆಕ್ಷೇಪಣೆ ಸಲ್ಲಿಸಬಹುದು.

ಬೆಳೆ ಸಮೀಕ್ಷೆ ದತ್ತಾಂಶವನ್ನು ಬೆಳೆವಿಮೆ(Bele vime), ಬೆಂಬಲ ಬೆಲೆ ಯೋಜನೆಯಡಿ(MSP) ಬೆಳೆ ಮಾರಾಟ ಮಾಡಲು, ಬೆಳೆ ನಷ್ಟ ಪರಿಹಾರ(bele hani) ಹಾಗೂ ಇತರ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಳಕೆ ಮಾಡಲಾಗುವುದು. ಆದ್ದರಿಂದ ರೈತರು ತಾವು ಬೆಳೆದ ಬೆಳೆ ಹಾಗೂ ಬೆಳೆ ಸಮೀಕ್ಷೆಯಲ್ಲಿ (crop survey)ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಖಾತ್ರಿಪಡಿಸಿಕೊಳ್ಳಬೇಕು. ಒಂದು ವೇಳೆ ಭಿನ್ನವಾಗಿದ್ದಲ್ಲಿ, ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ನಂತರದ ಆಕ್ಷೇಪಣೆ ಸ್ವೀಕರಿಸಲಾಗುವುದಿಲ್ಲ.
ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಗೂಗಲ್ ಪ್ಲೇ ಸ್ಟೋರ್ ಮೂಲಕ ಅಥವಾ https://play.google.com/
ನಂತರ ರೈತ select ಮಾಡಿ


ನಂತರ ವರ್ಷ,ಋುತು, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ.
ನಂತರ ಸರ್ವೇ ನಂಬರ್ ಹಾಕಿ,ಹಿಸ್ಸಾಆಯ್ಕೆ ಮಾಡಿ,ಸಮೀಕ್ಷೆಯ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ನಂತರ ಬೆಳೆವಿವರ ವೀಕ್ಷಿಸಿ ಮೇಲೆ ಕ್ಲಿಕ್ ಮಾಡಿ

ನಂತರ photo ಮೇಲೆ ಕ್ಲಿಕ್ ಮಾಡಿದರೆ ನೀವು ಬೆಳೆದ ಬೆಳೆ ಹಾಗೂ ಫೋಟೊ ಅಪ್ಲೊಡ್ ಸರಿಯಾಗಿರುವುದನ್ನು ಪರಿಕ್ಷೀಸಿ.


ಬೆಳೆ ಸಮಿಕ್ಷೆ ಸರಿಯಾಗಿರದಿದ್ದರೆ,ಮತ್ತೆ ಬೆಳೆ ಸಮಿಕ್ಷೆ ಮಾಡಿ ಸರಿಪಡಿಸಲು ಅವಕಾಶವಿರುತ್ತದೆ.
ಏನಿದು ಬೆಳೆ ದರ್ಶಕ ಆ್ಯಪ್?
ಈ ಅಪ್ಲಿಕೇಶನ್ ಮಾಡಿದ ಉದ್ದೇಶ ಬೆಳೆ ಸಮೀಕ್ಷೆಯನ್ನು (Crop survey)ನೋಡಲು.. ಇದರಲ್ಲಿ ನೀವು ಅಪ್ಲೋಡ್ ಮಾಡಿದ ಚಿತ್ರಗಳನ್ನು ಮತ್ತು ಸಮೀಕ್ಷೆ ಮಾಡಿದ ಸರ್ವೇಯರ್ ವಿವರಗಳನ್ನು ನೋಡಬಹುದು.
ತಮ್ಮ ಮೊಬೈಲ್ ಮೂಲಕ ಬೆಳೆಗಳ ಸಮೀಕ್ಷೆ(Bele samikshe) ಮಾಡಬಹುದು. ಅಥವಾ ನೆರೆಯ ಖಾಸಗಿ ವ್ಯಕ್ತಿಗಳ (Private resident) ಮೊಬೈಲ್ ಮೂಲಕ ಜಮೀನುಗಳ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ನಿಮ್ಮ ಜಮೀನಿನ ಸರ್ವೆ ನಂಬರ್(Survey number) ಮತ್ತು ಜಮೀನಿನ ಫೊಟೋ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಮೊಬೈಲ್ ನಲ್ಲಿ Bele darshak app ಮೂಲಕ ಕ್ಷಣಾರ್ಧದಲ್ಲಿ ನೋಡಬಹುದು. ಒಂದು ವೇಳೆ ತಪ್ಪಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು.
ಬೆಳೆ ದರ್ಶಕ್ ಆ್ಯಪ್(bele darshaka app) ಇನ್ಸ್ ಸ್ಟಾಲ್ ಮಾಡಿಕೊಂಡ ನಂತರ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಇನ್ನಿತರ ಮಾಹಿತಿ ನಮೂದಿಸಬೇಕು. ಬೆಳೆ ದರ್ಶಕ್ ಆ್ಯಪ್(Bele darshaka application) ಮೂಲಕ ಜಮೀನಿನಲ್ಲಿ ಬೆಳೆ ಸಮೀಕ್ಷೆ (Bele samikshe)ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ (Crop survey)ಸಮಯದಲ್ಲಿ ತೆಗೆಯಲಾದ ಜಿಪಿಎಸ್ ಆಧಾರಿತ (GPS Photo)ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ಅಲ್ಲದೆ ರೈತರ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ, (Mobile number)ರೈತರು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ನೋಡಬಹುದು.
ಒಂದು ವೇಳೆ ಮಾಹಿತಿ ತಪ್ಪಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು.ಮೇಲ್ವಿಚಾರಕರು ಸೂಕ್ತ ಬೆಳೆಗಳನ್ನು ದಾಖಲಿಸಿ ರೈತರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುತ್ತಾರೆ. ಇನ್ನೇಕೆ ತಡ ಒಮ್ಮೆ ನಿಮ್ಮ ಬೆಳೆ ಸಮೀಕ್ಷೆಯಲ್ಲಿ ಎಲ್ಲಾ ಸರ್ವೆ ನಂಬರ್, ಮಾಹಿತಿ ಹಾಗೂ ಫೋಟೋ ಸರಿಯಾಗಿ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಬೇಟಿ ಕೊಡಿ
]]>ಭಾರತೀಯ ಅಂಚೆ ಇಲಾಖೆಯು 'ಹೊಸ ಫ್ರಾಂಚೈಸಿ ಯೋಜನೆ 2.0' ಅನ್ನು ಪರಿಚಯಿಸಿದೆ. ಜನವರಿ 1, 2026 ರಿಂದ ಜಾರಿಗೆ ಬರುವ ಈ ಯೋಜನೆಯು ಯುವಕರಿಗೆ ಸ್ವಯಂ ಉದ್ಯೋಗದ ಅವಕಾಶ ನೀಡುತ್ತದೆ. ಕಡಿಮೆ ಹೂಡಿಕೆಯಲ್ಲಿ ಅಂಚೆ ಸೇವೆಗಳನ್ನು ಒದಗಿಸಿ ಆಕರ್ಷಕ ಕಮಿಷನ್ ಗಳಿಸಬಹುದು. ಆಧುನಿಕ ತಂತ್ರಜ್ಞಾನ ಮತ್ತು ಡಿಜಿಟಲ್ ಸೇವೆಗಳಿಗೆ ಒತ್ತು ನೀಡಲಾಗಿದೆ. ಅರ್ಹತೆ, ಹೂಡಿಕೆ, ಕಮಿಷನ್ ಮತ್ತು ಅರ್ಜಿ ಸಲ್ಲಿಕೆ ವಿವರಗಳನ್ನು ತಿಳಿಯಿರಿ.
ನೀವು ಅಂಚೆ ಇಲಾಖೆಯ ಫ್ರಾಂಚೈಸಿಯನ್ನು ಮುನ್ನಡೆಸಲು ಬಯಸುತ್ತಿದ್ದೀರಾ? ಹಾಗಿದ್ದರೆ, ನಿಮಗೆ ಇಲ್ಲಿದೆ ಎಂದು ಸುವರ್ಣಾವಕಾಶ. ಭಾರತೀಯ ಅಂಚೆ ಇಲಾಖೆಯು ದೇಶದಾದ್ಯಂತ ತನ್ನ ಸೇವೆಗಳನ್ನು ವಿಸ್ತರಿಸಲು ಮತ್ತು ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗದ ಅವಕಾಶವನ್ನು ನೀಡಲು "ಹೊಸ ಫ್ರಾಂಚೈಸಿ ಯೋಜನೆ 2.0" ಅನ್ನು ಪರಿಚಯಿಸಿದೆ. ಈ ಯೋಜನೆಯು ಜನವರಿ 01, 2026 ರಿಂದ ಜಾರಿಗೆ ಬಂದಿದ್ದು, ಆಧುನಿಕ ತಂತ್ರಜ್ಞಾನ ಮತ್ತು ಡಿಜಿಟಲ್ ಸೇವೆಗಳ ಮೇಲೆ ಹೆಚ್ಚಿನ ಗಮನ ಹರಿಸಿದೆ. ಈ ಹಿನ್ನೆಲೆಯಲ್ಲಿ ಫ್ರಾಂಚೈಸಿಯನ್ನು ಪಡೆಯುವುದು ಹೇಗೆ? ಪ್ರಯೋಜನಗಳೇನು? ಅರ್ಜಿ ಸಲ್ಲಿಕೆ ಹೇಗೆ ಇತ್ಯಾದಿ ವಿವರಗಳನ್ನು ತಿಳಿಯೋಣ.
ಭಾರತೀಯ ಅಂಚೆ ಇಲಾಖೆಯ 'ಹೊಸ ಫ್ರಾಂಚೈಸಿ ಯೋಜನೆ 2.0' ಒಂದು ಮಹತ್ವದ ಉಪಕ್ರಮವಾಗಿದ್ದು, ಇದು 'ಆತ್ಮನಿರ್ಭರ ಭಾರತ' ಮತ್ತು 'ಡಿಜಿಟಲ್ ಇಂಡಿಯಾ' ಅಭಿಯಾನದ ಅಡಿಯಲ್ಲಿ ಅಂಚೆ ಸೇವೆಗಳಿಲ್ಲದ ಪ್ರದೇಶಗಳಲ್ಲಿ ಜನಸಾಮಾನ್ಯರಿಗೆ ಸ್ವಯಂ ಉದ್ಯೋಗದ ಅವಕಾಶಗಳನ್ನು ಕಲ್ಪಿಸುತ್ತದೆ. ಅತ್ಯಂತ ಕಡಿಮೆ ಹೂಡಿಕೆಯೊಂದಿಗೆ ಸಣ್ಣ ಉದ್ಯಮಿಗಳು ಅಥವಾ ವ್ಯಕ್ತಿಗಳು ಅಂಚೆ ಚೀಟಿಗಳ ಮಾರಾಟ, ಸ್ಪೀಡ್ ಪೋಸ್ಟ್ ಬುಕಿಂಗ್, ಇ-ಕಾಮರ್ಸ್ ಪಾರ್ಸೆಲ್ ಮತ್ತು ಹಣಕಾಸು ಸೇವೆಗಳನ್ನು ಒದಗಿಸುವ ಮೂಲಕ ಆಕರ್ಷಕ ಕಮಿಷನ್ ಗಳಿಸಬಹುದು. ಈ ಯೋಜನೆಯು ಎಪಿಟಿ 2.0 ಎಂಬ ಸುಧಾರಿತ ತಾಂತ್ರಿಕ ವೇದಿಕೆಯನ್ನು ಬಳಸಿಕೊಂಡು ಡಿಜಿಟಲ್ ಪಾವತಿ, ರಿಯಲ್-ಟೈಮ್ ಟ್ರ್ಯಾಕಿಂಗ್ ಮತ್ತು ಸ್ಮಾರ್ಟ್ ಲಾಕರ್ಗಳಂತಹ ಆಧುನಿಕ ಸೌಲಭ್ಯಗಳನ್ನು ನೀಡುತ್ತದಲ್ಲದೆ, ಸರ್ಕಾರದ ಮಾನ್ಯತೆಯೊಂದಿಗೆ ಉದ್ಯೋಗಾಕಾಂಕ್ಷಿಗಳಿಗೆ ಸುಸ್ಥಿರ ಆದಾಯವನ್ನು ಖಚಿತಪಡಿಸುತ್ತದೆ.
ಈ ಯೋಜನೆಯಡಿ ಫ್ರಾಂಚೈಸಿ ಪಡೆಯಲು ಸ್ಥಳ ಮತ್ತು ಒಪ್ಪಂದದ ಆಧಾರದ ಮೇಲೆ 5,000 ರೂ. ರಿಂದ 10,000 ರೂ. ವರೆಗೆ ಮರುಪಾವತಿಸಲ್ಪಡುವ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ. ಪೀಠೋಪಕರಣಗಳು, ಕಂಪ್ಯೂಟರ್ ಮತ್ತು ಇತರ ತಾಂತ್ರಿಕ ಉಪಕರಣಗಳು ಸೇರಿದಂತೆ ಮೂಲಸೌಕರ್ಯ ಸಿದ್ಧಪಡಿಸಲು ಅಂದಾಜು 1 ಲಕ್ಷ ರೂ.ದಿಂದ 1.5 ಲಕ್ಷ ರೂ.ದವರೆಗೆ ಒಟ್ಟು ಹೂಡಿಕೆಯ ಅಗತ್ಯವಿರುತ್ತದೆ. ಫ್ರಾಂಚೈಸಿ ಮಾಲೀಕರು ತಮ್ಮ ಕಾರ್ಯಕ್ಷಮತೆಯ ಆಧಾರದ ಮೇಲೆ ಮಾಸಿಕ 20,000 ರೂ.ದಿಂದ 80,000 ರೂ.ಕ್ಕಿಂತ ಹೆಚ್ಚು ಆದಾಯವನ್ನು ಗಳಿಸಲು ಅವಕಾಶವಿದೆ.
For more such information, join our WhatsApp Channel- whatsapp.com/channel/0029Va
]]>
ಕುರಿ ಸಾಕಾಣಿಕೆ ಈಗ ಲಾಭದಾಯಕ ಉದ್ಯಮವಾಗಿದೆ. ಕುರಿ ಸಾಕಣೆ ಮಾಡುವ ಯುವಕರನ್ನು ಪ್ರೋತ್ಸಾಹಿಸಲು ಕರ್ನಾಟಕ ಸರ್ಕಾರ 'ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ' ಜಾರಿಗೆ ತಂದಿದೆ. ಈ ಯೋಜನೆಯಡಿ 20 ಕುರಿ/ಮೇಕೆ ಮತ್ತು 1 ಟಗರು/ಹೋತದ ಘಟಕ ನೀಡಲಾಗುತ್ತದೆ. ಒಟ್ಟು 1,75,000 ರೂ. ವೆಚ್ಚದಲ್ಲಿ 50% ಸಾಲ, 25% ಸಹಾಯಧನ, 25% ಫಲಾನುಭವಿ ವಂತಿಕೆ ಇರುತ್ತದೆ. ಗ್ರಾಮೀಣ ಯುವಕರಿಗೆ ಉದ್ಯೋಗಾವಕಾಶ ನೀಡಲು ಇದು ಸಹಕಾರಿ. ಈ ಯೋಜನೆಯ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಹಿಂದೊಮ್ಮೆ ಒಂದು ಸಮುದಾಯಕ್ಕಷ್ಟೇ ಸೀಮಿತವಾಗಿದ್ದ ಕುರಿ ಸಾಕಾಣಿಕೆಯು ಇಂದು ಒಂದು ವೃತ್ತಿಪರ ಉದ್ಯೋಗವಾಗಿ ಮಾರ್ಪಾಟ್ಟಿದೆ. ಹೆಚ್ಚಿನ ಯುವಕರು ಕುರಿ ಸಾಕಾಣಿಕೆಯತ್ತ ಆಕರ್ಷಿತರಾಗುತ್ತಿದ್ದಾರೆ. ಕರ್ನಾಟಕ ಸರ್ಕಾರವು ರಾಜ್ಯದ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಜೀವನಮಟ್ಟವನ್ನು ಸುಧಾರಿಸಲು ಮತ್ತು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ' ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆರ್ಥಿಕವಾಗಿ ಹಿಂದುಳಿದ ಸದಸ್ಯರಿಗೆ ಸುಸ್ಥಿರ ಜೀವನೋಪಾಯವನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯು ಕರ್ನಾಟಕ ಸರ್ಕಾರದ ಪಶುಸಂಗೋಪನಾ ಇಲಾಖೆಯ ಒಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ರಾಜ್ಯದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆರ್ಥಿಕವಾಗಿ ಹಿಂದುಳಿದ ಸದಸ್ಯರಿಗೆ ಸುಸ್ಥಿರ ಜೀವನೋಪಾಯವನ್ನು ಕಲ್ಪಿಸುವ ಉದ್ದೇಶ ಹೊಂದಿದೆ. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ಒಟ್ಟು 1,75,000 ರೂ.ವೆಚ್ಚದಲ್ಲಿ 20 ಕುರಿ/ಮೇಕೆ ಮತ್ತು 1 ಟಗರು/ಹೋತವನ್ನೊಳಗೊಂಡ (20+1) ಘಟಕವನ್ನು ನೀಡಲಾಗುತ್ತದೆ. ಈ ಮೊತ್ತದಲ್ಲಿ ಶೇ. 50 ರಷ್ಟು ಎನ್.ಸಿ.ಡಿ.ಸಿ ವತಿಯಿಂದ ಸಾಲ, ಶೇ. 25 ರಷ್ಟು ರಾಜ್ಯ ಸರ್ಕಾರದ ಸಹಾಯಧನ ಮತ್ತು ಉಳಿದ ಶೇ. 25 ರಷ್ಟು ಫಲಾನುಭವಿಯ ವಂತಿಕೆಯಾಗಿರುತ್ತದೆ.

ಈ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಒಂದು ಸಣ್ಣ ಪ್ರಮಾಣದ ಕುರಿ ಅಥವಾ ಮೇಕೆ ಸಾಕಾಣಿಕೆ ಘಟಕವನ್ನು ಮಂಜೂರು ಮಾಡಲಾಗುತ್ತದೆ. ಈ ಘಟಕವು ಒಟ್ಟು 21 ಪ್ರಾಣಿಗಳನ್ನು ಒಳಗೊಂಡಿರುತ್ತದೆ, ಅದರಲ್ಲಿ 20 ಹೆಣ್ಣು ಕುರಿ/ಮೇಕೆಗಳು ಮತ್ತು ಸಂತಾನೋತ್ಪತ್ತಿಗಾಗಿ 1 ಗಂಡು ಟಗರು ಅಥವಾ ಹೋತವನ್ನು ನೀಡಲಾಗುತ್ತದೆ. ಇದನ್ನು ವೈಜ್ಞಾನಿಕವಾಗಿ ಒಂದು ಲಾಭದಾಯಕ ಸಾಕಾಣಿಕಾ ಘಟಕವೆಂದು ಪರಿಗಣಿಸಲಾಗುತ್ತದೆ.
ಒಂದು ಪೂರ್ಣ ಪ್ರಮಾಣದ ಘಟಕವನ್ನು ಸ್ಥಾಪಿಸಲು ತಗಲುವ ಒಟ್ಟು ಮೊತ್ತವನ್ನು 1,75,000 ರೂ. (ಒಂದು ಲಕ್ಷದ ಎಪ್ಪತ್ತೈದು ಸಾವಿರ ರೂಪಾಯಿಗಳು) ಎಂದು ನಿಗದಿಪಡಿಸಲಾಗಿದೆ. ಈ ಮೊತ್ತವು ಪ್ರಾಣಿಗಳ ಖರೀದಿ ಮತ್ತು ಇತರ ಪ್ರಾರಂಭಿಕ ವೆಚ್ಚಗಳನ್ನು ಒಳಗೊಂಡಿರುತ್ತದೆ.
ಪ್ರಸ್ತುತ 2026ರ ಆರಂಭದ ಮಾಹಿತಿಯಂತೆ, ಈ ಯೋಜನೆಯು ರಾಜ್ಯಾದ್ಯಂತ ಜಾರಿಯಲ್ಲಿದ್ದರೂ ಕೆಲವು ಜಿಲ್ಲೆಗಳಲ್ಲಿ ಅನುದಾನದ ಬಿಡುಗಡೆ ವಿಳಂಬವಾಗಿರುವ ವರದಿಗಳಿವೆ. ಕಳೆದ ವರ್ಷಗಳಲ್ಲಿ ಸಾವಿರಾರು ರೈತರು ಇದರ ಲಾಭ ಪಡೆದಿದ್ದಾರೆ. ಪ್ರಸ್ತುತ ಸಾಲಿನ ಹೊಸ ಅರ್ಜಿ ಸಲ್ಲಿಕೆ ಮತ್ತು ಅನುದಾನದ ಲಭ್ಯತೆಯ ಬಗ್ಗೆ ಮಾಹಿತಿ ಪಡೆಯಲು ರೈತರು ತಕ್ಷಣವೇ ತಮ್ಮ ಜಿಲ್ಲಾ ಪಶುಸಂಗೋಪನಾ ಕಚೇರಿಯನ್ನು ಸಂಪರ್ಕಿಸುವುದು ಸೂಕ್ತ.
ಸಲ್ಲಿಸಲಾದ ಅರ್ಜಿಗಳನ್ನು ಪರಿಶೀಲಿಸಲು ಜಿಲ್ಲಾ ಮಟ್ಟದಲ್ಲಿ ಒಂದು ಅಧಿಕೃತ ಸಮಿತಿಯನ್ನು ರಚಿಸಲಾಗಿರುತ್ತದೆ. ಈ ಸಮಿತಿಯು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ ಪಶುಸಂಗೋಪನಾ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕರು ಮತ್ತು ಲೀಡ್ ಬ್ಯಾಂಕ್ ಮ್ಯಾನೇಜರ್ಗಳು ಸದಸ್ಯರಾಗಿರುತ್ತಾರೆ. ಈ ಸಮಿತಿಯು ಅರ್ಜಿದಾರರ ಅರ್ಹತೆ ಮತ್ತು ಲಭ್ಯವಿರುವ ಗುರಿಯ ಆಧಾರದ ಮೇಲೆ ಅಂತಿಮವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡುತ್ತದೆ.
]]>
ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಖಾರಿಫ್ ಹಂಗಾಮಿನ ಮೆಕ್ಕೆಜೋಳ ಬೆಳೆಗಾರರಿಗಾಗಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯನ್ನು ಜಾರಿಗೆ ತಂದಿದೆ. ದಾಖಲೆ ಪ್ರಮಾಣದ ಉತ್ಪಾದನೆಯಿಂದ ಬೆಲೆ ಕುಸಿತ ಎದುರಿಸುತ್ತಿರುವ ರೈತರಿಗೆ ಪ್ರತಿ ಕ್ವಿಂಟಾಲ್ಗೆ 2,150 ರೂ. ನಿಗದಿತ ದರ ನಿಗದಿಪಡಿಸಲಾಗಿದೆ. ಮಾರುಕಟ್ಟೆ ದರ 1,900 ರೂ.ಗಿಂತ ಕಡಿಮೆಯಾದರೆ 250 ರೂ.ವರೆಗೆ ಬೆಲೆ ವ್ಯತ್ಯಾಸ ಪರಿಹಾರ ಧನ ದೊರೆಯಲಿದೆ. ಈ ಯೋಜನೆಯಿಂದ 10 ಲಕ್ಷಕ್ಕೂ ಹೆಚ್ಚು ರೈತರು ಪ್ರಯೋಜನ ಪಡೆಯಲಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.
ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಖಾರಿಫ್ ಹಂಗಾಮಿನ ಮೆಕ್ಕೆಜೋಳ ಬೆಳೆಗಾರರಿಗೆ ನೆರವಾಗಲು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯನ್ನು ಜಾರಿಗೊಳಿಸಿದೆ. ರಾಜ್ಯದಲ್ಲಿ ಈ ಬಾರಿ ದಾಖಲೆ ಪ್ರಮಾಣದ ಮೆಕ್ಕೆಜೋಳ ಉತ್ಪಾದನೆಯಾಗಿದ್ದು, ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರಿಗೆ ಈ ಯೋಜನೆ ಆಸರೆಯಾಗಲಿದೆ. ಈ ಯೋಜನೆಯಿಂದ ರಾಜ್ಯದಲ್ಲಿನ 10 ಲಕ್ಷಕ್ಕೂ ಹೆಚ್ಚಿನ ಮೆಕ್ಕೆಜೋಳ ಬೆಳೆಗಾರರಿಗೆ ಅನುಕೂಲವಾಗಲಿದೆ. ರಾಜ್ಯದ ಮೆಕ್ಕೆಜೋಳ ಬೆಳೆಗಾರರು ಎದುರಿಸುತ್ತಿರುವ 'ಬೆಲೆ ಕುಸಿತ' ಮತ್ತು 'ಸಂಕಷ್ಟದ ಮಾರಾಟ'ವನ್ನು ತಡೆಯಲು ಸರ್ಕಾರವು ಪ್ರತಿ ಕ್ವಿಂಟಾಲ್ಗೆ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆಯನ್ನು ನಿಗದಿಪಡಿಸಿದೆ.
ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಖಾರಿಫ್ ಹಂಗಾಮಿನ ಮೆಕ್ಕೆಜೋಳ ಬೆಳೆಗಾರರಿಗೆ ನೆರವಾಗಲು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ ಜಾರಿಗೆ ತಂದಿದ್ದು, ಪ್ರತಿ ಕ್ವಿಂಟಾಲ್ಗೆ 2,150 ರೂ. ನಿಗದಿತ ದರ ನಿಗದಿಪಡಿಸಿದೆ. ಮಾರುಕಟ್ಟೆ ದರವು 1,900 ರೂ. ಅಥವಾ ಅದಕ್ಕಿಂತ ಕಡಿಮೆಯಾದಲ್ಲಿ ರೈತರಿಗೆ ಪ್ರತಿ ಕ್ವಿಂಟಾಲ್ಗೆ 250 ರೂ.ವರೆಗೆ ಬೆಲೆ ವ್ಯತ್ಯಾಸದ ಪರಿಹಾರ ಧನ ದೊರೆಯಲಿದೆ. ಮಾರುಕಟ್ಟೆ ಬೆಲೆ ಏರಿಕೆಯಾದಂತೆ ಈ ಪರಿಹಾರದ ಮೊತ್ತವು ಕಡಿಮೆಯಾಗುತ್ತಾ ಹೋಗುತ್ತದೆ ಮತ್ತು ನಿಗದಿತ ಬೆಲೆಯನ್ನು ತಲುಪಿದಾಗ ಸ್ಥಗಿತಗೊಳ್ಳುತ್ತದೆ. ಆದರೆ ರಾಜ್ಯದ ಸಾಮಾನ್ಯ ಸಂಗ್ರಹಣೆ ಯೋಜನೆಯಡಿ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್ಗೆ 2,400 ರೂ.ಕನಿಷ್ಠ ಬೆಂಬಲ ಬೆಲೆ ಲಭ್ಯವಿರುತ್ತದೆ. ಈ ಯೋಜನೆಯು ನಿಯೋಜಿತ ಎಪಿಎಂಸಿ ಮತ್ತು ಉಪ-ಮಾರುಕಟ್ಟೆ ಯಾರ್ಡ್ಗಳಲ್ಲಿ ಏಕೀಕೃತ ಮಾರುಕಟ್ಟೆ ವೇದಿಕೆ ಮೂಲಕ ಮಾರಾಟವಾಗುವ ಗರಿಷ್ಠ ನಾಲ್ಕು ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಒಳಗೊಳ್ಳಲಿದ್ದು, ಪ್ರತಿ ರೈತರಿಗೆ ಗರಿಷ್ಠ 50 ಕ್ವಿಂಟಾಲ್ ಅಥವಾ ಪ್ರತಿ ಎಕರೆಗೆ ಗರಿಷ್ಠ 12 ಕ್ವಿಂಟಾಲ್ ಮಿತಿಯವರೆಗೆ ಮಾತ್ರ ಸೌಲಭ್ಯ ಸಿಗಲಿದೆ. ಕಡ್ಡಾಯ ಗುಣಮಟ್ಟದ ತಪಾಸಣೆ ಮತ್ತು ದಾಖಲೆಗಳ ಪರಿಶೀಲನೆಯ ನಂತರ ಪರಿಹಾರದ ಮೊತ್ತವನ್ನು ನೇರ ನಗದು ವರ್ಗಾವಣೆ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.
ಜಿಲ್ಲಾಧಿಕಾರಿಗಳು ಈ ಯೋಜನೆಯ ಸಂಪೂರ್ಣ ಉಸ್ತುವಾರಿ ವಹಿಸಲಿದ್ದು, ಮಾರುಕಟ್ಟೆಗೆ ಬರುವ ಮೆಕ್ಕೆಜೋಳದ ದೈನಂದಿನ ವರದಿ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುತ್ತಾರೆ. ಏಕೀಕೃತ ಮಾರುಕಟ್ಟೆ ವೇದಿಕೆಯಲ್ಲಿ ಮೊದಲ ವಹಿವಾಟು ನಡೆದ ದಿನದಿಂದ ಒಂದು ತಿಂಗಳ ಕಾಲ ಈ ಯೋಜನೆ ಚಾಲ್ತಿಯಲ್ಲಿರುತ್ತದೆ. ಯೋಜನೆ ಮುಗಿದ ಎರಡು ತಿಂಗಳೊಳಗೆ ಸಮಗ್ರ ಲೆಕ್ಕಪರಿಶೋಧನೆ ನಡೆಸಲಾಗುವುದು.
]]>
ರೈತ ಬಂಧುಗಳ ಗಮನಕ್ಕೆ! ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 6,000 ರೂ.ಗಳ ವಾರ್ಷಿಕ ಸಹಾಯಧನ ಪಡೆಯಲು 'ರೈತ ಐಡಿ' ಕಡ್ಡಾಯವಾಗಿದೆ. ಇದು ನಿಮ್ಮ ಅರ್ಹತೆಯನ್ನು ಖಚಿತಪಡಿಸಿ, ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರುವಂತೆ ಮಾಡುತ್ತದೆ. ಮೋಸಗಾರರನ್ನು ತಡೆಯಲು ಮತ್ತು ನಿಜವಾದ ರೈತರಿಗೆ ನೆರವಾಗಲು ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಕರ್ನಾಟಕದ 'ಫೂಟ್ಸ್' ಮಾದರಿಯಲ್ಲಿ ಈ ಐಡಿ ನೀಡಲಾಗುತ್ತಿದೆ. ಹೊಸದಾಗಿ ಸೇರಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ (PM-Kisan) ಯೋಜನೆಯಲ್ಲಿ ಪಾರದರ್ಶಕತೆ ತರಲು ಮತ್ತು ನಕಲಿ ಫಲಾನುಭವಿಗಳನ್ನು ಪತ್ತೆಹಚ್ಚಲು ಕೇಂದ್ರ ಸರ್ಕಾರವು ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿದೆ. ಕರ್ನಾಟಕದ ಯಶಸ್ವಿ 'ಫ್ರೂಟ್ಸ್' ಮಾದರಿಯನ್ನೇ ಆಧರಿಸಿ ದೇಶಾದ್ಯಂತ ಈಗ 'ವಿಶಿಷ್ಟ ರೈತ ಗುರುತಿನ ಚೀಟಿ' ವಿತರಿಸುವ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ ಪಿಎಂ ಕಿಸಾನ್ ಕಂತಿನ ಹಣವನ್ನು ಪಡೆಯಲಯ ವಿಶಿಷ್ಟ ರೈತ ಐಡಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ಪಿಎಂ ಕಿಸಾನ್ ರೈತ ಐಡಿ , ಇದರ ಪ್ರಯೋಜನಗಳೇನು? ನೋಂದಣಿ ಹೇಗೆ ಎಂಬುದನ್ನು ತಿಳಿಯೋಣ.
2025ರಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಲಾಭವನ್ನು ಪಡೆಯಲು 'ರೈತ ಐಡಿ' ಅಥವಾ ಕಿಸಾನ್ ಐಡಿ ಕಡ್ಡಾಯವಾಗಿದ್ದು, ಇದು ಅರ್ಹ ರೈತರಿಗೆ ವಾರ್ಷಿಕ 6,000 ರೂ.ಗಳ ಆರ್ಥಿಕ ನೆರವು ನಿರಂತರವಾಗಿ ಸಿಗುವಂತೆ ಮಾಡುತ್ತದೆ. ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ರೈತರಿಗೆ ನೀಡಲಾಗುವ ಒಂದು ಅನನ್ಯ ಡಿಜಿಟಲ್ ಸಂಖ್ಯೆಯೇ 'ರೈತ ಐಡಿ'. ಇದು ರೈತರ ಆಧಾರ್ ಮತ್ತು ಭೂ ದಾಖಲೆಗಳೊಂದಿಗೆ (RTC) ನೇರವಾಗಿ ಸಂಪರ್ಕ ಹೊಂದಿರುತ್ತದೆ. ಕೇಂದ್ರ ಸರ್ಕಾರದ 'ಅಗ್ರಿಸ್ಟ್ಯಾಕ್' ಉಪಕ್ರಮದ ಭಾಗವಾಗಿರುವ ಈ ಡಿಜಿಟಲ್ ಐಡಿಯು ರೈತರ ಭೂ ದಾಖಲೆಗಳು, ಆಧಾರ್ ಮತ್ತು ಬ್ಯಾಂಕ್ ವಿವರಗಳನ್ನು ಒಂದೇ ದತ್ತಸಂಚಯದಲ್ಲಿ ಸಂಯೋಜಿಸುತ್ತದೆ. ಇದರಿಂದ ನಕಲಿ ಫಲಾನುಭವಿಗಳನ್ನು ತಡೆದು ನೇರವಾಗಿ ನೈಜ ರೈತರ ಖಾತೆಗೆ ಹಣ ವರ್ಗಾಯಿಸಲು ಸಾಧ್ಯವಾಗುತ್ತದೆ. ಕರ್ನಾಟದಲ್ಲಿ ಈಗಾಗಲೇ ಜಾರಿಯಲ್ಲಿರುವ ಫ್ರೂಟ್ಸ್ ಐಡಿ ಮಾದರಿಯಲ್ಲಿಯೇ ಇದನ್ನು ರೂಪಿಸಲಾಗಿದೆ. ಒಂದು ವೇಳೆ ರೈತರು ಈ ಐಡಿಯನ್ನು ಹೊಂದಿಲ್ಲದಿದ್ದರೆ ಅವರ 2,000 ರೂ.ಗಳ ಕಂತಿನ ಹಣ ಸ್ಥಗಿತಗೊಳ್ಳುವ ಸಾಧ್ಯತೆಯಿದ್ದು, ಪಾವತಿ ವಿಳಂಬ ಮತ್ತು ಅರ್ಜಿ ತಿರಸ್ಕಾರವನ್ನು ತಪ್ಪಿಸಲು ಆನ್ಲೈನ್ ಮೂಲಕ ಶೀಘ್ರವಾಗಿ ನೋಂದಣಿ ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಈ ಸರಳ ನೋಂದಣಿ ಪ್ರಕ್ರಿಯೆಯು ರೈತರಿಗೆ ಭವಿಷ್ಯದ ಸರ್ಕಾರಿ ಯೋಜನೆಗಳನ್ನು ಪಡೆಯಲು ಮತ್ತು ಆರ್ಥಿಕ ಭದ್ರತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ.
ಕರ್ನಾಟಕವು ಈಗಾಗಲೇ ಫ್ರೂಟ್ಸ್ (Farmer Registration and Unified Beneficiary Information System) ಮೂಲಕ ರೈತರಿಗೆ ಏಕಗವಾಕ್ಷಿ ಸೇವೆಯನ್ನು ನೀಡುತ್ತಿದೆ. ರಾಜ್ಯದ ಈ ಯಶಸ್ಸನ್ನು ಗಮನಿಸಿದ ಕೇಂದ್ರ ಸರ್ಕಾರ, ಈಗ ಇದನ್ನು ದೇಶದ 14 ರಾಜ್ಯಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿದೆ. ರಾಜ್ಯದಲ್ಲಿ ಒಟ್ಟು 59,13,902 ರೈತರಿಗೆ ರೈತ ಐಡಿ ನೀಡುವ ಗುರಿ ಇದೆ. ಈಗಾಗಲೇ ಫೂಟ್ಸ್ ಐಡಿ ಹೊಂದಿರುವ 45,14,772 ರೈತರನ್ನು ಅಂಗೀಕರಿಸಲಾಗಿದ್ದು, ಬಾಕಿ ಇರುವ 13.99 ಲಕ್ಷ ರೈತರಿಗೆ ಐಡಿ ವಿತರಣೆ ಪ್ರಕ್ರಿಯೆ ನಡೆಯುತ್ತಿದೆ.
ಪಿಎಂ-ಕಿಸಾನ್ ಯೋಜನೆಯಲ್ಲಿ ಪಾರದರ್ಶಕತೆ ತರಲು ಜಾರಿಗೆ ತಂದ ಡಿಜಿಟಲ್ ತಪಾಸಣಾ ಕ್ರಮಗಳಿಂದಾಗಿ ದೇಶಾದ್ಯಂತ ಲಕ್ಷಾಂತರ ಅನರ್ಹ ಖಾತೆಗಳನ್ನು ಪತ್ತೆಹಚ್ಚಿ ಸ್ಥಗಿತಗೊಳಿಸಲಾಗಿದೆ. ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ 7ನೇ ಕಂತಿನಲ್ಲಿ 52,81,757 ರೈತರಿದ್ದ ಫಲಾನುಭವಿಗಳ ಸಂಖ್ಯೆಯು 21ನೇ ಕಂತಿನ ವೇಳೆಗೆ 41,43,679ಕ್ಕೆ ಇಳಿಕೆಯಾಗಿದ್ದು, ಸುಮಾರು 11.38 ಲಕ್ಷಕ್ಕೂ ಅಧಿಕ ಅನರ್ಹ ಖಾತೆಗಳು ಬಂದ್ ಆಗಿವೆ. ಇದೇ ರೀತಿ ದೇಶಾದ್ಯಂತ 7ನೇ ಕಂತಿನಲ್ಲಿದ್ದ 9.84 ಕೋಟಿ ಫಲಾನುಭವಿಗಳ ಸಂಖ್ಯೆಯು ಕಳೆದ ನವೆಂಬರ್ನಲ್ಲಿ ಬಿಡುಗಡೆಯಾದ 21ನೇ ಕಂತಿನ ವೇಳೆಗೆ 9.34 ಕೋಟಿಗೆ ಇಳಿದಿದ್ದು, ಒಟ್ಟಾರೆ 50.20 ಲಕ್ಷಕ್ಕೂ ಹೆಚ್ಚು ಅನರ್ಹ ಖಾತೆಗಳನ್ನು ವ್ಯವಸ್ಥೆಯಿಂದ ಹೊರಹಾಕುವ ಮೂಲಕ ಅರ್ಹ ರೈತರಿಗೆ ಮಾತ್ರ ಯೋಜನೆಯ ಲಾಭ ತಲುಪುವಂತೆ ಮಾಡಲಾಗಿದೆ.

]]>
ಕರ್ನಾಟಕ ಸರ್ಕಾರದ 2025-30ರ ಕೈಗಾರಿಕಾ ನೀತಿಯು ಯುವಕರು, ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಆರ್ಥಿಕ ಕನಸುಗಳಿಗೆ ರೆಕ್ಕೆ ನೀಡುತ್ತಿದೆ! ಸ್ವಯಂ ಉದ್ಯೋಗ ಸ್ಥಾಪಿಸಲು ಭಾರಿ ಸಬ್ಸಿಡಿ, ಸುಲಭ ಸಾಲ ಮತ್ತು ಪರಿಶಿಷ್ಟ ಜಾತಿ/ಇತರ ಸಮುದಾಯದವರಿಗೆ ವಿಶೇಷ ಸಹಾಯಧನ ಲಭ್ಯವಿದೆ. ಸಣ್ಣ ವ್ಯಾಪಾರ, ಸಾರಿಗೆ, ಮಹಿಳಾ ಉದ್ಯಮಶೀಲತೆ - ಎಲ್ಲದಕ್ಕೂ ಆರ್ಥಿಕ ನೆರವು, ನಿಮ್ಮ ಕನಸು ನನಸಾಗಿಸಲು ಸರ್ಕಾರ ಸದಾ ಸಿದ್ಧ!
ಒಂದು ಉದ್ದಿಮೆ ಯಶಸ್ವಿಯಾಗಿ ಬೆಳೆಯಬೇಕೆಂದರೆ ಆರ್ಥಿಕ ಪ್ರೋತ್ಸಾಹ ಅತ್ಯಗತ್ಯ. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು 2025-30ರ ಕೈಗಾರಿಕಾ ನೀತಿಯ ಅಡಿಯಲ್ಲಿ ನಿರುದ್ಯೋಗಿ ಯುವಕರು, ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಆರ್ಥಿಕ ಸಬಲೀಕರಣಕ್ಕಾಗಿ ವಿವಿಧ ನಿಗಮಗಳ ಮೂಲಕ ಭಾರಿ ಸಬ್ಸಿಡಿ ಮತ್ತು ಸಾಲದ ಸೌಲಭ್ಯಗಳನ್ನು ಘೋಷಿಸಿದೆ. ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಹಾಗೂ ಸಮುದಾಯಗಳ ಆರ್ಥಿಕ ಸಬಲೀಕರಣಕ್ಕಾಗಿ ವಿವಿಧ ಅಭಿವೃದ್ಧಿ ನಿಗಮಗಳ ಮೂಲಕ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಭಾರಿ ಸಹಾಯಧನವನ್ನು ನೀಡುತ್ತಿದೆ.
ಈ ಯೋಜನೆಯಡಿ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರು ಸಣ್ಣ ಕೈಗಾರಿಕೆ, ಸೇವಾ ವಲಯ ಅಥವಾ ವ್ಯಾಪಾರವನ್ನು ಪ್ರಾರಂಭಿಸಲು ಬ್ಯಾಂಕ್ಗಳ ಸಹಯೋಗದೊಂದಿಗೆ ಹಣಕಾಸಿನ ನೆರವು ಪಡೆಯಬಹುದು. ನೀವು ಸ್ವಂತ ಉದ್ಯೋಗ ಅಥವಾ ಸಾರಿಗೆ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದ್ದರೆ, ಪರಿಶಿಷ್ಟ ಜಾತಿ ಸಮುದಾಯದ ನಿರುದ್ಯೋಗ ಯುವಕ-ಯುವತಿಯರಿಗೆ ಈ ಯೋಜನೆಯಡಿ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ಇಲಾಖೆಯ ಆಯಾ ನಿಗಮಗಳಿಂದ ಘಟಕ ವೆಚ್ಚ ಶೇ. 70 ರಷ್ಟು ಮತ್ತು ಗರಿಷ್ಠ ರೂ. 2.00 ಲಕ್ಷ ಸಹಾಯಧನ ನೀಡಲಾಗುವುದು. ಈ ಯೋಜನೆಯಡಿ ಪರಿಶಿಷ್ಟ ಜಾತಿಯ ಮಾದಿಗ ಜಾತಿಗೆ ಸೇರಿದ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯಧನದ ಆರ್ಥಿಕ ನೆರವನ್ನು ಒದಗಿಸಲಾಗುವುದು.
ಕರ್ನಾಟಕದ ನೂತನ ಕೈಗಾರಿಕಾ ನೀತಿ 2025-30ರ ಅಡಿಯಲ್ಲಿ ರಾಜ್ಯ ಸರ್ಕಾರವು ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸಲು ಹತ್ತು ಹಲವು ಆಕರ್ಷಕ ಸೌಲಭ್ಯಗಳನ್ನು ಘೋಷಿಸಿದೆ. ಈ ನೀತಿಯಡಿ ಸೂಕ್ಷ್ಮ ಮತ್ತು ಸಣ್ಣ ಉದ್ದಿಮೆಗಳಿಗೆ ಅವುಗಳ ಸ್ಥಿರ ಬಂಡವಾಳ ಹೂಡಿಕೆಯ ಮೇಲೆ ಶೇಕಡಾ 20 ರಿಂದ 30 ರವರೆಗೆ ಭಾರಿ ಸಬ್ಸಿಡಿಯನ್ನು ನೀಡಲಾಗುತ್ತಿದ್ದು, ಮಹಿಳಾ ಉದ್ಯಮಿಗಳ ನೇತೃತ್ವದ ಘಟಕಗಳಿಗೆ ಹೆಚ್ಚುವರಿಯಾಗಿ ಶೇಕಡಾ 5 ರಷ್ಟು ಪ್ರೋತ್ಸಾಹಕ ಸಬ್ಸಿಡಿ ಲಭ್ಯವಿದೆ. ಎಲೆಕ್ಟ್ರಾನಿಕ್ಸ್, ಬಾಹ್ಯಾಕಾಶ ಮತ್ತು ರಕ್ಷಣೆ, ಎಲೆಕ್ಟ್ರಿಕ್ ವಾಹನಗಳು (EV) ಹಾಗೂ ನವೀಕರಿಸಬಹುದಾದ ಇಂಧನದಂತಹ ಆದ್ಯತಾ ವಲಯಗಳಿಗೆ ವಿಶೇಷ ಪ್ಯಾಕೇಜ್ಗಳನ್ನು ನೀಡಲಾಗುತ್ತಿದೆ. ಇದರೊಂದಿಗೆ, ಉದ್ದಿಮೆದಾರರಿಗೆ ಆರ್ಥಿಕ ಹೊರೆ ತಗ್ಗಿಸಲು ಸತತ 5 ವರ್ಷಗಳ ಕಾಲ ವಿದ್ಯುತ್ ತೆರಿಗೆಯಿಂದ ಸಂಪೂರ್ಣ ವಿನಾಯಿತಿ ಮತ್ತು ಸ್ಥಿರ ಆಸ್ತಿಗಳ ಮೇಲಿನ ಮುದ್ರಾಂಕ ಶುಲ್ಕ ಹಾಗೂ ನೋಂದಣಿ ಶುಲ್ಕದ ಮರುಪಾವತಿಯಂತಹ ತೆರಿಗೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
]]>
ಹೈನುಗಾರಿಕೆಯಲ್ಲಿ ಯಶಸ್ಸು ಸಾಧಿಸಲು ಬಯಸುವವರಿಗೆ ಕರ್ನಾಟಕ ಸರ್ಕಾರವು ಉತ್ತಮ ಅವಕಾಶವನ್ನು ಒದಗಿಸುತ್ತಿದೆ. ಪಶು ಭಾಗ್ಯ ಯೋಜನೆ ಅಡಿಯಲ್ಲಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದಂತಹ ಆರ್ಥಿಕವಾಗಿ ಹಿಂದುಳಿದವರಿಗೆ ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳ ಮೂಲಕ ಎರಡು ಹಸು ಅಥವಾ ಎಮ್ಮೆಗಳನ್ನು ಖರೀದಿಸಲು ಶೇ. 50% ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಏನಿದು ಹೈನುಗಾರಿಕೆ ಯೋಜನೆ? ಇದರಿಂದ ರೈತರಿಗೆ ಏನೆಲ್ಲಾ ಪ್ರಯೋಜನಗಳಿವೆ? ಎಂಬುದನ್ನು ತಿಳಿಯೋಣ.
ಕರ್ನಾಟಕ ಹೈನುಗಾರಿಕೆ ಯೋಜನೆ , ಪಶು ಭಾಗ್ಯ ಯೋಜನೆ ಎಂದೂ ಕರೆಯಲ್ಪಡುತ್ತದೆ. ಇದು ರಾಜ್ಯ ಪ್ರಾಯೋಜಿತ ಉಪಕ್ರಮವಾಗಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಇದು ಕರ್ನಾಟಕದಲ್ಲಿ ಹೈನುಗಾರರನ್ನು ಬೆಂಬಲಿಸುವ ಮತ್ತು ಹೈನುಗಾರಿಕೆ ವಲಯವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಇದು ಡೈರಿ ಘಟಕಗಳನ್ನು ಸ್ಥಾಪಿಸಲು, ಪ್ರಾಣಿಗಳನ್ನು ಖರೀದಿಸಲು ಮತ್ತು ಸಾಲಗಳನ್ನು ಪಡೆಯಲು ಸಹಾಯಧನಗಳನ್ನು ಒಳಗೊಂಡಂತೆ ಡೈರಿ ರೈತರಿಗೆ ಹಣಕಾಸಿನ ನೆರವು, ತರಬೇತಿ ಮತ್ತು ಮಾರುಕಟ್ಟೆ ಬೆಂಬಲವನ್ನು ಒದಗಿಸುತ್ತದೆ. ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ಹೈನುಗಾರಿಕೆಯ ಘಟಕಗಳನ್ನು ಸ್ಥಾಪಿಸಲು ಮತ್ತು ಅಭಿವೃದ್ಧಿಪಡಿಸಲು 1.25 ಲಕ್ಷ ರೂ.ಗಳ ಸಹಾಯಧನವನ್ನು ನೀಡಲಾಗುತ್ತದೆ, ಇದು ಸ್ಥಿರ ಜೀವನೋಪಾಯ ಮತ್ತು ಹಾಲು ಉತ್ಪಾದನೆಗೆ ನೆರವಾಗುತ್ತದೆ
ಈ ಯೋಜನೆಯ ಮುಖ್ಯ ಉದ್ದೇಶವು ಗ್ರಾಮೀಣ ಪ್ರದೇಶದ ರೈತರಿಗೆ ಸ್ಥಿರ ಆದಾಯದ ಮೂಲವನ್ನು ಒದಗಿಸುವುದು ಮತ್ತು ಹೈನುಗಾರಿಕೆ ಕ್ಷೇತ್ರವನ್ನು ಬಲಪಡಿಸುವುದು. ಯೋಜನೆ ಅಡಿಯಲ್ಲಿ ಸಿಗುವ ಪ್ರಮುಖ ಪ್ರಯೋಜನಗಳೆಂದರೆ…

ಯೋಜನೆ ಅಡಿಯಲ್ಲಿ, ಅರ್ಹ ಫಲಾನುಭವಿಗಳಿಗೆ ಎರಡು ಹಸು ಅಥವಾ ಎಮ್ಮೆಗಳನ್ನು ಖರೀದಿಸಲು ಗರಿಷ್ಠ 1.25 ಲಕ್ಷ ರೂ. ಅಥವಾ ಶೇ. 50% ಸಬ್ಸಿಡಿ ನೀಡಲಾಗುತ್ತದೆ.
ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಎರಡು ಎಮ್ಮೆ ಅಥವಾ ಹಸುವನ್ನು ಖರೀದಿ ಮಾಡಲು ಸಹಾಯಹಧನವನ್ನು ಒದಗಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 10, 2025 ಆಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು:
ಯಾವುದೇ ಹೆಚ್ಚಿನ ಮಾಹಿತಿ ಬೇಕಿದ್ದರೆ, ನೀವು ಸಹಾಯವಾಣಿ ಸಂಖ್ಯೆ 9482300400 ಅನ್ನು ಸಂಪರ್ಕಿಸಬಹುದು.
]]>ಕರ್ನಾಟಕ ಸರ್ಕಾರವು "ನಮ್ಮ ಹೊಲ ನಮ್ಮ ದಾರಿ" ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಗ್ರಾಮೀಣ ರೈತರ ಜಮೀನುಗಳಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅನುದಾನವನ್ನು ಒದಗಿಸಲಾಗುತ್ತದೆ. ಇದರಿಂದ ಕೃಷಿ ಉತ್ಪನ್ನಗಳ ಸಾಗಾಣಿಕೆ ಸುಲಭವಾಗಲಿದ್ದು, ಸಾರಿಗೆ ವೆಚ್ಚ ತಗ್ಗಲಿದೆ. ಸ್ಥಳೀಯರಿಗೆ ಉದ್ಯೋಗಾವಕಾಶವೂ ದೊರೆಯಲಿದೆ. ಈ ಕುರಿತ ಸಮಗ್ರ ಮಾಹಿತಿ ಇಲ್ಲಿದೆ.
ಗ್ರಾಮೀಣ ಭಾಗದಲ್ಲಿ ರೈತರ ಬಳಿ ಜಮೀನು ಇದ್ದರೂ, ಅವುಗಳಿಗೆ ಹೋಗಲು ದಾರಿಯೇ ಇರುವುದಿಲ್ಲ. ಇದಕ್ಕಾಗಿ ಗಾಮಸ್ಥರ ಮಧ್ಯೆ ಜಗಳಗಳು, ಮನಸ್ಥಾಪಗಳು ನಡೆದಿದ್ದಿವೆ. ಇದಕ್ಕೆಲ್ಲಾ ಒಂದು ಪರಿಹಾರವನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ನಮ್ಮ ಹೊಲ ನಮ್ಮ ದಾರಿ ಎಂಬ ಯೋಜನೆಯನ್ನು ರೂಪಿಸಿದೆ. ರಾಜ್ಯದ ಗ್ರಾಮೀಣ ಪ್ರದೇಶದ ರೈತರಿಗೆ ನೇರವಾಗಿ ಅವರ ಹೊಲ, ಗದ್ದೆ, ತೋಟ ಮತ್ತು ಜಮೀನುಗಳಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸುವ ಮಹತ್ವಕಾಂಕ್ಷೆಯ ಯೋಜನೆಯೇ "ನಮ್ಮ ಹೊಲ ನಮ್ಮ ದಾರಿ". ಈ ಯೋಜನೆಯು ಕೃಷಿ ಉತ್ಪನ್ನಗಳ ಸಾಗಾಣಿಕೆ ಮತ್ತು ಗ್ರಾಮೀಣ ಮೂಲಸೌಕರ್ಯಗಳ ಸುಧಾರಣೆಗೆ ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಈ ಯೋಜನೆಯ ಮೂಲಕ ರೈತರು ತಮ್ಮ ಹೊಲಗಳಿಗೆ ಟ್ರ್ಯಾಕ್ಟರ್ಗಳನ್ನು ಒಯ್ಯಬಹುದಾದಷ್ಟು ದೊಡ್ಡದಾದ ದಾರಿಯನ್ನು ಮಾಡಿಕೊಳ್ಳಬಹುದಾಗಿದೆ.
"ನಮ್ಮ ಹೊಲ ನಮ್ಮ ದಾರಿ" ಎಂಬುದು ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಮಹತ್ವದ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದ ರೈತರ ಹೊಲ, ಗದ್ದೆ ಮತ್ತು ಜಮೀನುಗಳಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ, ಪ್ರತಿ ಕ್ಷೇತ್ರಕ್ಕೆ 30 ಕಿ.ಮೀ ನಂತೆ, ಒಟ್ಟಾರೆ 5670 ಕಿ.ಮೀ ರಸ್ತೆಯನ್ನು ಪ್ರತಿ ಕಿ.ಮೀಗೆ ರೂ. 12.50 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಗುರಿಯನ್ನು ಇದು ಹೊಂದಿದೆ. ಈ ಯೋಜನೆಗೆ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ರಾಜ್ಯ ಸರ್ಕಾರದ ಲೆಕ್ಕ ಶೀರ್ಷಿಕೆ 3054 ರ ಅನುದಾನಗಳನ್ನು ಒಗ್ಗೂಡಿಸಿ ಬಳಸಲಾಗುತ್ತಿದ್ದು, ಕೃಷಿ ಉತ್ಪನ್ನಗಳ ಮಾರುಕಟ್ಟೆ ಸಾಗಾಣಿಕೆ ವೆಚ್ಚ ತಗ್ಗಿಸುವಿಕೆ ಮತ್ತು ಗ್ರಾಮೀಣ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವಿಕೆ ಇದರ ಪ್ರಮುಖ ಪ್ರಯೋಜನಗಳಾಗಿವೆ.
"ನಮ್ಮ ಹೊಲ ನಮ್ಮ ದಾರಿ" ಯೋಜನೆಯಡಿ ಪ್ರತಿ ಕಿ.ಮೀ ರಸ್ತೆ ನಿರ್ಮಾಣಕ್ಕೆ ನಿಗದಿಪಡಿಸಿದ ಒಟ್ಟು ರೂ. 12.50 ಲಕ್ಷ ವೆಚ್ಚವನ್ನು ಎರಡು ಅನುದಾನಗಳಡಿ ಹಂಚಿಕೆ ಮಾಡಲಾಗುತ್ತದೆ. ಅದರಲ್ಲಿ ಬಹುಪಾಲು, ಅಂದರೆ ರೂ. 9.00 ಲಕ್ಷ ವನ್ನು ಎಂಜಿನರೇಗಾ ಯೋಜನೆಯಡಿಯಲ್ಲಿ ಬಳಸಲಾಗುತ್ತದೆ, ಇದು ಮುಖ್ಯವಾಗಿ 3.75 ಮೀ ಅಗಲದ ರಸ್ತೆ ನಿರ್ಮಾಣದ ಕೆಲಸಗಳು, 1.00 ಕಿ.ಮೀ ಉದ್ದಕ್ಕೆ 0.075 ಮೀಟರ್ ದಪ್ಪದ ಗ್ರೇಡ್-2 ಮೆಟಲಿಂಗ್ ಮತ್ತು 0.400 ಕಿ.ಮೀ ಉದ್ದಕ್ಕೆ 0.075 ಮೀಟರ್ ದಪ್ಪದ ಗ್ರೇಡ್-3 ಮೆಟಲಿಂಗ್ ಕಾಮಗಾರಿಗಳನ್ನು ಒಳಗೊಂಡಿರುತ್ತದೆ; ಇನ್ನುಳಿದ ರೂ. 3.50 ಲಕ್ಷ ವನ್ನು ರಾಜ್ಯ ಸರ್ಕಾರದ ಲೆಕ್ಕ ಶೀರ್ಷಿಕೆ 3054 ರಡಿ ಮೀಸಲಿಡಲಾಗಿದ್ದು, ಇದು ರಸ್ತೆ ಕಾಮಗಾರಿಗಳಿಗೆ ಯಂತ್ರಗಳನ್ನು ಬಳಸುವ ಅಗತ್ಯವಿದ್ದಲ್ಲಿ ಆ ವೆಚ್ಚವನ್ನು ನಿರ್ವಹಿಸಲು ಅನುವು ಮಾಡಿಕೊಡುತ್ತದೆ.
]]>